CoolCoder44 commited on
Commit
0f32eaa
·
verified ·
1 Parent(s): ce2c5ec

54d4e81fae6231a5114db86e974dd9f9f2281c1a32a6225a027d86db8b03563d

Browse files
Files changed (50) hide show
  1. eesanje/url_46_4_8.txt +9 -0
  2. eesanje/url_46_4_9.txt +14 -0
  3. eesanje/url_46_50_1.txt +6 -0
  4. eesanje/url_46_50_10.txt +15 -0
  5. eesanje/url_46_50_11.txt +5 -0
  6. eesanje/url_46_50_12.txt +5 -0
  7. eesanje/url_46_50_2.txt +5 -0
  8. eesanje/url_46_50_3.txt +8 -0
  9. eesanje/url_46_50_4.txt +5 -0
  10. eesanje/url_46_50_5.txt +6 -0
  11. eesanje/url_46_50_6.txt +7 -0
  12. eesanje/url_46_50_7.txt +7 -0
  13. eesanje/url_46_50_8.txt +21 -0
  14. eesanje/url_46_50_9.txt +5 -0
  15. eesanje/url_46_51_1.txt +5 -0
  16. eesanje/url_46_51_10.txt +6 -0
  17. eesanje/url_46_51_11.txt +6 -0
  18. eesanje/url_46_51_12.txt +9 -0
  19. eesanje/url_46_51_2.txt +9 -0
  20. eesanje/url_46_51_3.txt +7 -0
  21. eesanje/url_46_51_4.txt +6 -0
  22. eesanje/url_46_51_5.txt +8 -0
  23. eesanje/url_46_51_6.txt +3 -0
  24. eesanje/url_46_51_7.txt +7 -0
  25. eesanje/url_46_51_8.txt +7 -0
  26. eesanje/url_46_51_9.txt +5 -0
  27. eesanje/url_46_52_1.txt +5 -0
  28. eesanje/url_46_52_10.txt +11 -0
  29. eesanje/url_46_52_11.txt +12 -0
  30. eesanje/url_46_52_12.txt +6 -0
  31. eesanje/url_46_52_2.txt +6 -0
  32. eesanje/url_46_52_3.txt +6 -0
  33. eesanje/url_46_52_4.txt +11 -0
  34. eesanje/url_46_52_5.txt +7 -0
  35. eesanje/url_46_52_6.txt +7 -0
  36. eesanje/url_46_52_7.txt +9 -0
  37. eesanje/url_46_52_8.txt +12 -0
  38. eesanje/url_46_52_9.txt +12 -0
  39. eesanje/url_46_53_1.txt +8 -0
  40. eesanje/url_46_53_10.txt +7 -0
  41. eesanje/url_46_53_11.txt +16 -0
  42. eesanje/url_46_53_12.txt +8 -0
  43. eesanje/url_46_53_2.txt +7 -0
  44. eesanje/url_46_53_3.txt +7 -0
  45. eesanje/url_46_53_4.txt +10 -0
  46. eesanje/url_46_53_5.txt +5 -0
  47. eesanje/url_46_53_6.txt +7 -0
  48. eesanje/url_46_53_7.txt +7 -0
  49. eesanje/url_46_53_8.txt +12 -0
  50. eesanje/url_46_53_9.txt +14 -0
eesanje/url_46_4_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಸಿಎಂ ಪತ್ನಿ ಪಡೆದಿದ್ದ ವಿವಾದಿತ 14 ನಿವೇಶನಗಳ ಸ್ಥಳ ಪರಿಶೀಲನೆ ನಡೆಸಿದ ಲೋಕಾಯುಕ್ತ ಪೊಲೀಸರು
2
+ 14
3
+ ಮೈಸೂರು,ಅ.1-ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಪತ್ರ ಬರೆದ ನಂತರವೂ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಇಂದು ಬೆಳಿಗ್ಗೆ ವಿವಾದಿತ ಜಮೀನಿನ ಸ್ಥಳ ಪರಿಶೀಲನೆ ನಡೆಸಿದ್ದಾರೆ.
4
+ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರೊಂದಿಗೆ ಮುಡಾ ಅ„ಕಾರಿಗಳು ಲೋಕಾಯುಕ್ತದ ಪೊಲೀಸರು ಕೆಸರೆ ಗ್ರಾಮಕ್ಕೆ ತೆರಳಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದರು ಎಂದು ಹೇಳಲಾದ ಭೂಮಿಯ ಪರಿಶೀಲನೆ ನಡೆಸಿದರು.ಈ ವೇಳೆ ಪೊಡಿ, ನಕ್ಷೆ ಹಾಗೂ ಇತರ ದಾಖಲಾತಿಗಳೊಂದಿಗೆ ಸ್ಥಳದಲ್ಲಿ ಮಹಜರು ನಡೆಸಲಾಯಿತು.
5
+ ಈ ವೇಳೆ ಪಾರ್ವತಿಯವರದು ಎಂದು ಹೇಳಲಾದ ಜಾಗವನ್ನು ಮುಡಾ ಅಭಿವೃದ್ಧಿಪಡಿಸಿ ನಿವೇಶನಗಳನ್ನಾಗಿ ವಿಂಗಡಿಸುವುದು, ನಿವೇಶನ ಸಂಖ್ಯೆಗಳ ಫಲಕಗಳನ್ನು ನೆಟ್ಟಿರುವುದು, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಕೆಲಸಗಳು ಪೂರ್ಣಗೊಂಡಿರುವುದು ಕಂಡುಬಂದಿತ್ತು. ಈ ಸ್ಥಳದಲ್ಲಿ ಸುತ್ತಮುತ್ತ ಹಲವು ಬೃಹತ್ ಕಟ್ಟಡಗಳು ನಿರ್ಮಾಣಗೊಂಡಿರುವುದು ಕಾಣಸಿಗುತ್ತಿದೆ.
6
+ ಮಲ್ಲಿಕಾರ್ಜುನ ಸ್ವಾಮಿಯವರು ದೇವರಾಜು ಅವರಿಂದ ಜಮೀನನ್ನು ಖರೀದಿಸಿದ್ದರು. ಅನಂತರ ತಮ್ಮ ಸಹೋದರಿ ಆಗಿರುವ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಅರಿಶಿನ ಕುಂಕುಮಕ್ಕೆ ಭೂಮಿಯನ್ನು ಉಡುಗೊರೆ ನೀಡಿದ್ದರು ಎಂದು ಹೇಳಲಾಗಿದೆ.ಈ ಜಮೀನಿನ ಪರಭಾರೆಯೇ ಅಕ್ರಮ ಎಂಬುದು ಸ್ನೇಹಮಯಿ ಕೃಷ್ಣ ಅವರ ದೂರಾಗಿದೆ. ಹೀಗಾಗಿ ನ್ಯಾಯಾಲಯದ ಆದೇಶದ ಮೇರೆಗೆ ತನಿಖೆ ಕೈಗೆತ್ತಿಕೊಂಡಿರುವ ಲೋಕಾಯುಕ್ತ ಪೊಲೀಸರು ಇಂದು ಪ್ರಥಮವಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
7
+ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ , ದಾಖಲೆಗಳಿಗೆ ಸಂಬಂ„ಸಿದ ಯಾವುದೇ ನೋಟಿಸ್ ಬಂದಿಲ್ಲ. ಆದರೆ, ವಿಚಾರಣೆಯಲ್ಲಿ ಯಾವುದೇ ದಾಖಲಾತಿ ಕೋರಿದ್ದರೆ ನಾನು ಕೊಡಲು ಸಿದ್ಧ ಎಂದರು.
8
+ ಮೊದಲು ದೂರು ನೀಡಿದ ಸಂದರ್ಭದಲ್ಲಿ ದಾಖಲಾತಿಗಳನ್ನು ಈಗಾಗಲೇ ಕೊಟ್ಟಿದ್ದೇನೆ. ಈಗ ಮತ್ತೆ ವಿಚಾರಣೆ ಸಂದರ್ಭದಲ್ಲಿ ದಾಖಲಾತಿಗಳನ್ನು ಕೇಳಿದರೆ ಕೊಡಲು ಸಿದ್ಧ. ಇದರ ಜೊತೆಗೆ ಮುಡಾದಲ್ಲಿ ನಡೆದ ಎಲ್ಲಾ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂಬುದು ನನ್ನ ಒತ್ತಾಯ ಎಂದರು.
9
+ ಹೋರಾಟಕ್ಕೆ ಸಿಕ್ಕ ಜಯ ಇಡಿಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಿಎಂ ಪತ್ನಿ ಪಾರ್ವತಿ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಸುಳ್ಳು ಆರೋಪ ಮಾಡುವುದಿಲ್ಲ. ಈವರೆಗಿನ ಎಲ್ಲಾ ಪ್ರಕರಣಗಳಲ್ಲೂ ಜಯ ಗಳಿಸಿದ್ದೇನೆ. ಅದೇ ರೀತಿ ಇಲ್ಲೂ ಜಯ ಗಳಿಸುವ ವಿಶ್ವಾಸವಿದೆ. ನ���್ನ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ ಎಂದು ಹೇಳಿದರು.
eesanje/url_46_4_9.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ನಿವೇಶನಗಳನ್ನು ಹಿಂದಿರುಗಿಸಿದರೂ ಸಿಎಂ ಹಾಗೂ ಫ್ಯಾಮಿಲಿಗೆ ತಪ್ಪಲ್ಲ ಕಾನೂನು ಸಂಕಷ್ಟ
2
+ '' : '' '
3
+ ಬೆಂಗಳೂರು,ಸೆ.1– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು 14 ಮುಡಾ ನಿವೇಶನಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಿಂತಿರುಗಿಸುವುದಾಗಿ ಹೇಳಿಕೊಂಡಿದ್ದರೂ ತನಿಖೆಗೆ ಯಾವುದೇ ಅಡ್ಡಿ ಆತಂಕಗಳು ಎದುರಾಗುವುದಿಲ್ಲ ಎನ್ನುತ್ತಿದೆ ಕಾನೂನು.
4
+ ನಾವು ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಅ„ಕೃತ ಪತ್ರ ಬರೆದಿದ್ದೇವೆ ಎಂದು ಆಯುಕ್ತರಿಗೆ ಪತ್ರ ಬರೆದಿದ್ದರೂ ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ಮೇಲ್ನೋಟಕ್ಕೆ ನಿಯಮ ಉಲ್ಲಂಘನೆಯಾಗಿರುವುದು ಕಂಡುಬಂದಿರುವುದರಿಂದ ತನಿಖೆ ಅಗತ್ಯವಿದೆ ಎಂದು ಆದೇಶದಲ್ಲಿ ಹೇಳಿದೆ.
5
+ ಇತ್ತ ಜನಪ್ರತಿನಿ„ಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಎ-ïಐಆರ್ ದಾಖಲಿಸಿ 3 ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ(ಇಡಿ) ಬೇನಾಮಿ ವಹಿವಾಟು ಪ್ರಕರಣ ಸಂಬಂಧ ಇಸಿಐಆರ್ ದಾಖಲಿಸಿಕೊಂಡಿದೆ.
6
+ ಇನ್ನೊಂದೆಡೆ ಮೈಸೂರು ಲೋಕಾಯುಕ್ತ ಪೊಲೀಸರು ಮಂಗಳವಾರ ಕೆಸರೆ ಗ್ರಾಮದಲ್ಲಿ ಸ್ಥಳ ಮಹಜರು ನಡೆಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕಾನೂನು ಪ್ರಕ್ರಿಯೆ ಈಗಾಗಲೇ ಸಾಕಷ್ಟು ದೂರ ಸಾಗಿರುವುದರಿಂದ ಇಂಥ ಸಂದರ್ಭದಲ್ಲಿ ಅರ್ಜಿದಾರರು ತಮ್ಮ ಪ್ರಕರಣವನ್ನು ಕೈಬಿಡುವಂತೆ ಮನವಿ ಮಾಡಿದರೂ ಊರ್ಜಿತವಾಗುವ ಸಾಧ್ಯತೆಗಳು ಕಡಿಮೆ ಎನ್ನುತ್ತಾರೆ ಕಾನೂನು ತಜ್ಞರು.
7
+ ಏಕೆಂದರೆ ಕಾನೂನಿನ ದೃಷ್ಟಿಯಲ್ಲಿ ತಪ್ಪು ಮಾಡಿದವನಿಗೆ ಶಿಕ್ಷೆಯಾಗಬೇಕು. ಇಲ್ಲಿ ನಿವೇಶನಗಳನ್ನು ಹಿಂತಿರುಗಿಸಿದ ತಕ್ಷಣ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವವರು ಮುಕ್ತರಾಗುವುದಿಲ್ಲ. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರುವ ಮೊದಲೇ ಸ್ಥಳೀಯ ಮಟ್ಟದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕಿತ್ತು.
8
+ ಈಗ ತನಿಖೆ ಪ್ರಾರಂಭವಾಗಿರುವುದರಿಂದ ನ್ಯಾಯಾಲಯ ಇಂಥ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡುವುದು ತೀರ ಕಡಿಮೆ ಎನ್ನಲಾಗುತ್ತಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯನವರೇ ಎ1 ಆರೋಪಿಯಾಗಿರುವುದರಿಂದ ಲೋಕಾಯುಕ್ತ ಪೊಲೀಸರು ಇಲ್ಲವೇ ಇ.ಡಿ ಅ„ಕಾರಿಗಳು ಯಾವುದೇ ಸಂದರ್ಭದಲ್ಲಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಡಬಹುದು.
9
+ ಒಂದು ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಾಗ ನ್ಯಾಯಾಲಯವು ಮಧ್ಯಪ್ರವೇಶ ಮಾಡಲು ಅವಕಾಶ ಇರುವುದಿಲ್ಲ. ಹಾಗೊಂದು ವೇಳೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದರೆ ದೂರುದಾರರು ಸುಪ್ರೀಂಕೋರ್ಟ್ಗೆ ಹೋಗುವ ಸಾಧ್ಯತೆ ಇದೆ ಎಂದು ಕಾನೂನು ತಜ್ಞರು ಹೇಳುತ್ತಾರೆ.
10
+ ಈಗ ಸಿದ್ದರಾಮಯ್ಯನವರ ಮುಂದೆ ಹೆಚ್ಚಿನ ಆಯ್ಕೆಗಳಿಲ್ಲ. ಅವರು ಲೋಕಾಯುಕ್ತ ಮತ್ತು ಇ.ಡಿ ಯಾವುದೇ ಕ್ಷಣದಲ್ಲಿ ನೋಟಿಸ್ ನೀಡಿ ವಿಚಾರಣೆಗೆ ಕರೆಯಬಹುದು. ಇದರಲ್ಲಿ ಅಕ್ರಮ ಹಣದ ವಹಿವಾಟು ನಡೆದಿದೆ ಎಂದು ಇ.ಡಿ ಶಂಕಿಸಿರುವ ���ಾರಣ ನ್ಯಾಯಾಲಯ ಪ್ರಕರಣವನ್ನು ರದ್ದುಪಡಿಸುವ ಸಾಧ್ಯತೆ ತೀರಾ ಕಡಿಮೆ.
11
+ ಸಿಎಂ ಸಿದ್ದರಾಮಯ್ಯ ಮತ್ತವರ ಪತ್ನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಕರಣದ ಮಾಹಿತಿ ವರದಿ ದಾಖಲಿಸಿದ ನಂತರ ನಿನ್ನೆ ಸಂಜೆ ಮುಖ್ಯಮಂತ್ರಿಯವರು ಕಾನೂನು ತಜ್ಞರು ಮತ್ತು ಇಬ್ಬರು ಸಚಿವರನ್ನು ಭೇಟಿ ಮಾಡಿದ್ದರು.
12
+ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾ„ಕಾರಕ್ಕೆ (ಮುಡಾ) ತಮ್ಮ ನಿವೇಶನಗಳನ್ನು ವಾಪಸ್ ಕೊಡುವುದಾಗಿ ಪತ್ರ ಬರೆದಿದ್ದರು.ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತು ಎಡಿಜಿಪಿ (ಗುಪ್ತಚರ) ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.ಸಭೆಯಲ್ಲಿ ಇಡಿ ತನಿಖೆಗೆ ತಡೆಯಾ್ಞÉ ಪಡೆಯಲು ಕೋರ್ಟ್ ಮೊರೆ ಹೋಗುವುದು ಸೇರಿದಂತೆ ವಿವಿಧ ಆಯ್ಕೆಗಳ ಬಗ್ಗೆ ಅವರು ಸಿಎಂ ಮುಂದೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
13
+ ಇದಕ್ಕೂ ಮುನ್ನ ಇಡಿ ಬೆಂಗಳೂರು ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ವಾರಾಂತ್ಯದಲ್ಲಿ ಕರ್ನಾಟಕ ಲೋಕಾಯುಕ್ತದ ಮೈಸೂರು ಘಟಕವು ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ಮತ್ತು ಮಾಜಿ ಭೂ ಮಾಲೀಕ ದೇವರಾಜ್ ವಿರುದ್ಧ ದಾಖಲಿಸಿದ ಎಫ್ ಐಆರ್ ಆಧರಿಸಿ ಇಸಿಐಆರ್ ದಾಖಲಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.
14
+ ಭೂಮಾಲೀಕ – ದೇವರಾಜು – ಇವರಿಂದ ಸ್ವಾಮಿ ಜಮೀನು ಖರೀದಿಸಿ ಪಾರ್ವತಿಗೆ ಉಡುಗೊರೆಯಾಗಿ ನೀಡಿದ್ದರು. 2021ರಲ್ಲಿ ಮೈಸೂರು ನಗರ ವ್ಯಾಪ್ತಿಯ ಡೌನ್ಮಾರ್ಕೆಟ್ ಕೆಸರೆ ಪ್ರದೇಶದಲ್ಲಿ ಲೇಔಟ್ ರಚಿಸಲು 3 ಎಕರೆ 16 ಗುಂಟೆ ಜಾಗಕ್ಕೆ ಬದಲಾಗಿ 14 ನಿವೇಶನ ಹಂಚಿಕೆಗೆ ಸಂಬಂ„ಸಿದಂತೆ ಭ್ರಷ್ಟಾಚಾರ, ವಂಚನೆ ಮತ್ತು -ÉÇೀರ್ಜರಿ ಆರೋಪದ ಮೇಲೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು.
eesanje/url_46_50_1.txt ADDED
@@ -0,0 +1,6 @@
 
 
 
 
 
 
 
1
+ ಬಿಜೆಪಿ-ಜೆಡಿಎಸ್‌‍ ಆಧಾರರಹಿತ ಆರೋಪಗಳ ವಿರುದ್ಧ ರಾಜಕೀಯವಾಗಿ, ಕಾನೂನಾತ್ಮಕವಾಗಿ ಎದುರಿಸುತ್ತೇನೆ : ಸಿಎಂ
2
+ ಬೆಂಗಳೂರು, ಆ.10-ಬಿಜೆಪಿ-ಜೆಡಿಎಸ್‌‍ ಮಾಡುತ್ತಿರುವ ಆಧಾರರಹಿತ ಆರೋಪಗಳ ವಿರುದ್ಧ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
3
+ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಕಪ್ಪು ಮಸಿ ಬಳಿಯಬೇಕು ಎಂಬ ಉದ್ದೇಶದಿಂದ ಆಧಾರ ರಹಿತ ಆರೋಪ ಮಾಡಿ ಪಾದಯಾತ್ರೆ ಮಾಡಿದ್ದಾರೆ.
4
+ ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ ಎಂಬ ಕಾರಣಕ್ಕೆ ನಿನ್ನೆ ಜನಾಂದೋಲನ ಸಮಾವೇಶ ಮಾಡಲಾಯಿತು. ಸುಳ್ಳು ಆರೋಪ ಮಾಡುತ್ತಿರುವ ಅವರ ಹಗರಣಗಳು ಬೇಕಾದಷ್ಟು ಇವೆ. ಈಗಾಗಲೇ ಕೆಲವನ್ನು ಹೇಳಿದ್ದೇವೆ. ಕೆಲವು ಇನ್ನೂ ವಿಚಾರಣೆ ಹಂತದಲ್ಲಿವೆ. ವರದಿ ಬಂದ ನಂತರ ಅವುಗಳನ್ನು ಬಹಿರಂಗ ಪಡಿಸಲಾಗುವುದು ಎಂದು ಅವರು ಹೇಳಿದರು.
5
+ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಸೇರಿದಂತೆ ಇದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.
6
+ ಜನರ ಆಶೀರ್ವಾದದಿಂದ ನಡೆಯುತ್ತಿರುವ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಅದ್ಯಾವುದಕ್ಕೂ ನಾನು ಜಗ್ಗುವುದಿಲ್ಲ. ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದರೆ, ರಾಜಕೀಯವಾಗಿ ಅನುಕೂಲವಾಗಲಿದೆ ಎಂದು ಅವರು ಭಾಾವಿಸಿದ್ದಾರೆ ಎಂದು ಮುಖ್ಯಮಂತ್ರಿ ಟೀಕಿಸಿದರು.
eesanje/url_46_50_10.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಮೈಸೂರಲ್ಲಿ ಜನಾಂದೋಲನ ಸಮಾವೇಶ : ಬಿಜೆಪಿ-ಜೆಡಿಎಸ್ ವಿರುದ್ಧ ಘರ್ಜಿಸಿದ ಕಾಂಗ್ರೆಸ್ ನಾಯಕರು
2
+ ಬೆಂಗಳೂರು, ಆ.9-ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪಾದಯಾತ್ರೆಗೆ ಸಡ್ಡು ಹೊಡೆದು ಆಡಳಿತಾ ರೂಢ ಕಾಂಗ್ರೆಸ್ ಪಕ್ಷ ಮೈಸೂರಿನಲ್ಲಿಂದು ಹಮಿ ಕೊಂಡಿದ್ದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಹಗರಣಗಳನ್ನು ಬಹಿರಂಗಗೊಳಿಸಿ ತಕ್ಕಶಾಸ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದೆ.
3
+ ದಾವಣಗೆರೆಯಲ್ಲಿ ನಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯ-75 ಮಾದರಿಯಲ್ಲೇ ಮೈಸೂರಿನಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಹಮಿಕೊಂಡಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಹಲವು ನಾಯಕರು ಹರಿಹಾಯ್ದರು.
4
+ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧವೇ ಕೇಳಿ ಬಂದಿರುವ ಮುಡಾ ಹಗರಣ ವಿಚಾರ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿವೆ.ನಾಳೆ ಮೈಸೂರಿನಲ್ಲಿ ಬೃಹತ್ ಸಮಾವೇಶ ಹಮಿಕೊಳ್ಳಲಾಗಿದೆ. ಇದಕ್ಕೆ ಪರ್ಯಾಯವಾಗಿ ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಡೆಯಿತು.
5
+ ಸಿದ್ದರಾಮಯ್ಯ ಅವರು ತಮ ವಿರುದ್ಧದ ಗಂಭೀರ ಆರೋಪಗಳಿಗೆ ತಕ್ಕ ಉತ್ತರ ನೀಡುವ ಜೊತೆಗೆ ಬಿಜೆಪಿ ಜೆಡಿಎಸ್ ಅಧಿಕಾರಾವಧಿಯಲ್ಲಿನ ಹಗರಣಗಳನ್ನು ತೆರೆದಿಟ್ಟರು. ಮುಡಾ ಹಗರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ನಾವು ಜಗ್ಗುವುದಿಲ್ಲ. ಜನ ಬೆಂಬಲದ ಹೋರಾಟದ ಜೊತೆಗೆ ಕಾನೂನು ಹೋರಾಟವನ್ನು ಮಾಡುತ್ತೇವೆ ಎಂದು ಗುಡುಗಿದರು.
6
+ ದೋಸ್ತಿ ಪಕ್ಷಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ವಿಪಕ್ಷಗಳು ಎಷ್ಟೇ ಹೋರಾಟ, ಪ್ರಯತ್ನ ಮಾಡಿದರೂ ನಮ ಸದೃಢ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. ನಮ ಸಂಪೂರ್ಣ ಸಂಪುಟ ಸಿಎಂ ಸಿದ್ದು ಬೆಂಬಲಕ್ಕೆ ಬಂಡೆಯಂತೆ ನಿಲ್ಲುತ್ತದೆ ಎಂದು ಹೇಳಿದರು.
7
+ ಈ ಬಂಡೆ ಜೊತೆ 136 ಶಾಸಕರು ಇದ್ದಾರೆ. 1.8 ಕೋಟಿ ಮತದಾರರು ಇದ್ದಾರೆ. ಈ ಸರ್ಕಾರವನ್ನು ಹತ್ತು ತಿಂಗಳಲ್ಲಿ ಅಲುಗಾಡಿಸುತ್ತೇವೆ ಎಂಬ ಭ್ರಮೆಯಲ್ಲಿದ್ದೀರಿ. 10 ವರ್ಷವಾದರೂ ಅಲುಗಾಡಿಸಲು ಸಾಧ್ಯವಿಲ್ಲ. ನಿಮ ಪಾಪದ ಯಾತ್ರೆ ಪಾಪ ವಿಮೋಚನೆ ಯಾತ್ರೆಯಿಂದ ನಮಗೆ ಶಕ್ತಿ ಬಂದಿದೆ ಎಂದರು.
8
+ ಎಸ್.ಎಂ.ಕೃಷ್ಣ ಅವರು ಕಾವೇರಿಗಾಗಿ ಪಾದಯಾತ್ರೆ ಮಾಡಿದ್ದರು. ನಾವು ಮೇಕೆದಾಟು ಯೋಜನೆಗೆ ಪಾದಯಾತ್ರೆ ನಡೆಸಿದ್ದೆವು. ರಾಹುಲ್ ಗಾಂಧಿ ಅವರು ಭಾರತ್ ಜೋಡೊ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದ್ದರು. ಸಂಪತ್ತಿನ ಉಳಿವಿಗಾಗಿ ಸಿದ್ದರಾಮಯ್ಯನವರು ಬಳ್ಳಾರಿ ಉಳಿವಿಗಾಗಿ ನ���ೆಸಿದ್ದರು. ನಿಮ ಪಾದಯಾತ್ರೆ ಏಕೆ ನಡೆಯುತ್ತಿದೆ ಎಂದು ಪ್ರಶ್ನಿಸಿದರು.
9
+ ಏನೂ ಆಗಿಲ್ಲದ ಮುಡಾ ಹಗರಣದಿಂದ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿರುವ ನಿಮ ಆಟ ನಡೆಯುವುದಿಲ್ಲ ಎಂದು ಡಿ.ಕೆ ಗುಡುಗಿದರು.ಇದಕ್ಕೂ ಮುನ್ನ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಡಾ. ಎಸ್.ಸಿ.ಮಹದೇವಪ್ಪ ಸಂವಿಧಾನದ ಆಶಯಗಳು ಗೊತ್ತಿಲ್ಲದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸಿದ್ದು, ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
10
+ ನಿಮ ಸರ್ಕಾರವಿದ್ದಾಗಲೇ ಜಮೀನಿಗೆ ಬದಲಾಗಿ ನಿವೇಶನವನ್ನು ನೀಡಲಾಗಿದೆ. ನಿವೇಶನ ನೀಡಿಕೆ ವಿಚಾರದಲ್ಲಿ ಮುಡಾ ತಪ್ಪು ಮಾಡಿರಬೇಕು ಇದರಲ್ಲಿ ಮುಖ್ಯಮಂತ್ರಿಯ ಯಾವ ತಪ್ಪು ಇಲ್ಲ. ಜನನಾಯಕರಾದ ಸಿದ್ದರಾಮಯ್ಯನವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
11
+ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಮಾತನಾಡಿ, ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಜೆಡಿಎಸ್ ಆರೋಪ ಮಾಡುವ ಮೂಲಕ ಸರ್ಕಾರ ಕಾಂಗ್ರೆಸ್ ಪಕ್ಷ ಹಾಗೂ ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಿದ್ದಾರೆ. ಇಂದು ನಡೆದ ಈ ಸಮಾವೇಶ ಮತ್ತಷ್ಟು ಶಕ್ತಿ ತಂದು ಕೊಟ್ಟಿದೆ ಅನಾವಶ್ಯಕವಾಗಿ 20 ವರ್ಷದ ಹಳೆಯ ಪ್ರಕರಣವನ್ನು ಮುಂಚೂಣಿಗೆ ತಂದು ಆಡಳಿತ ನಡೆಸಲು ತೊಂದರೆ ಕೊಡಲಾಗುತ್ತಿದೆ.
12
+ ವಿರೋಧ ಪಕ್ಷದ ಸ್ಥಾನದ ಜವಾಬ್ಧಾರಿಯನ್ನು ಕೂಡ ನಿರ್ವಹಿಸುತ್ತಿಲ್ಲವೆಂದು ವಾಗ್ದಾಳಿ ನಡೆಸಿದರು. ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ನಿಷ್ಠಾವಂತ ಹಾಗೂ ಕಪ್ಪು ಚುಕ್ಕೆಯಿಲ್ಲದ ಆಡಳಿತ ಮಾಡುತ್ತಿರುವ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಸಹೋದರಿಗೆ ದಾನವಾಗಿ ಜಮೀನು ನೀಡಿರುವುದು ಯಾವ ರೀತಿ ಕಾನೂನುಬಾಹಿರವಾಗಿರುತ್ತದೆಂದು ಪ್ರಶ್ನಿಸಿದ್ದಾರೆ.
13
+ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಮಾತನಾಡಿ, ನಮ ಸರ್ಕಾರವನ್ನು ಪತನಗೊಳಿಸಲು ಷಡ್ಯಂತ್ರ ರೂಪಿಸುತ್ತಿವೆ. ಅದರ ವಿರುದ್ಧ ನಾವು ಒಗ್ಗಟ್ಟಿನ ಹೋರಾಟ ಮಾಡುತ್ತೇವೆ ಎಂದು ಹೇಳಿದರು.ಸಂಪುಟದ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ನಿಗಮಗಳ ಅಧ್ಯಕ್ಷರು ಸೇರಿದಂತೆ 300ಕ್ಕೂ ಹೆಚ್ಚು ಮುಖಂಡರು ವೇದಿಕೆಯಲ್ಲಿದ್ದರು.
14
+ ಇದೇ ಸಂದರ್ಭದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು ಬರೆದಿರುವ ಮುಖ್ಯಮಂತ್ರಿಗಳ ಮೇಲಿನ ಆರೋಪಗಳ ಕುರಿತ ಸತ್ಯ ಶೋಧನ ವರದಿ ಕೃತಿಯನ್ನು ಬಿಡುಗಡೆ ಮಾಡಲಾಯಿತು.
15
+ ಕೆಪಿಸಿಸಿಯಿಂದ ಹಮಿಕೊಂಡಿದ್ದ ಜನಾಂದೋಲನ ಈ ಸಮಾವೇಶಕ್ಕೆ ಮೈಸೂರು ಸುತ್ತಮುತ್ತಲ ಪ್ರದೇಶದ ಹಾಗೂ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಕಾರ್ಯಕರ್ತರು ಆಗಮಿಸಿದ್ದರು.
eesanje/url_46_50_11.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರ ಪುನಾರರಂಭ
2
+ ಬೆಂಗಳೂರು, ಆ.9-ಭೂ ಕುಸಿತದ ಹಿನ್ನೆಲೆಯಲ್ಲಿ ಎರಡು ವಾರಗಳಿಂದ ಬಂದ್‌ ಆಗಿದ್ದ ಬೆಂಗಳೂರು -ಮಂಗಳೂರು-ಕಣ್ಣೂರು ರೈಲುಗಳ ಸಂಚಾರ ಇಂದಿನಿಂದ ಆರಂಭಗೊಂಡಿದೆ.
3
+ ಭಾರಿ ಭೂ ಕುಸಿತದಿಂದ ಕಡಗರವಳ್ಳಿ-ಎಡಕುಮೇರಿ ಬಳಿ ರೈಲು ಹಳಿ ಹಾನಿಗೀಡಾಗಿತ್ತು, ದುರಸ್ತಿ ಕಾರ್ಯ ಪೂರ್ಣಗೊಂಡ ನಾಲ್ಕು ದಿನಗಳ ಬಳಿಕ ರೈಲು ಸಂಚಾರ ಪುನಾರರಂಭಗೊಳಿಸಲಾಗಿದೆ.
4
+ ಯಶವಂತಪುರ-ಮಂಗಳೂರು ಜಂಕ್ಷನ್‌ನಿಂದ ಸಂಚರಿಸುವ ಗೊಮಟೇಶ್ವರ ಎಕ್‌್ಸಪ್ರೆಸ್‌‍ ರೈಲು ದುರಸ್ತಿಗೊಂಡ ಹಳಿಯ ಮೇಲೆ ಇಂದು ಪ್ರಯಾಣ ಬೆಳೆಸಿತು. ಈ ಸಂದರ್ಭದಲ್ಲಿ ರೈಲ್ವೆ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು, ರೈಲಿನ ಓಡಾಟವನ್ನು ಗಮನಿಸಿದರು.
5
+ ಕಳೆದ ಜು.26ರಿಂದ ಈ ಮಾರ್ಗದಲ್ಲಿ ರೈಲು ಸಂಚಾರ ರದ್ದುಗೊಂಡಿತ್ತು ಅದರಂತೆ ಬೆಂಗಳೂರು-ಕಣ್ಣೂರು, ಬೆಂಗಳೂರು-ಕಾರಾವಾರ , ಕಣ್ಣೂರು-ಬೆಂಗಳೂರು, ಕಾರಾವಾರ -ಬೆಂಗಳೂರು, ಬೆಂಗಳೂರು- ಮುರುಡೇಶ್ವರ, ವಿಜಯಪುರ, ಮಂಗಳೂರು ಸೆಂಟ್ರಲ್‌ ಸೇರಿದಂತೆ 12 ರೈಲುಗಳನ್ನು ರದ್ದುಪಡಿಸಲಾಗಿತ್ತು. ಇಂದಿನಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭ ಆಗಿದೆ.
eesanje/url_46_50_12.txt ADDED
@@ -0,0 +1,5 @@
 
 
 
 
 
 
1
+ ಚನ್ನಪಟ್ಟಣ ತಹಸೀಲ್ದಾರ್‌ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ತರಾಟೆ
2
+ ಬೆಂಗಳೂರು, ಆ.9-ಚನ್ನಪಟ್ಟಣ ತಹಸೀಲ್ದಾರ್‌ ಕಚೇರಿಗೆ ದಿಢೀರ್‌ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ತಪ್ಪು ಮಾಹಿತಿ ನೀಡಿದ ತಹಸೀಲ್ದಾರ್‌ ಅವರನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.
3
+ ಚನ್ನಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ವರ್ಷ ಕಳೆದರೂ ಅನುಷ್ಠಾನಗೊಳ್ಳದ ಇ-ಆಫೀಸ್‌‍ ಬಗ್ಗೆ ಸಚಿವರು ಬೇಸರಗೊಂಡು ತಹಸೀಲ್ದಾರ್‌ ನರಸಿಂಹ ಮೂರ್ತಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
4
+ ಇ-ಆಫೀಸ್‌‍ ಬದಲಿಗೆ ಲೆಡ್ಜರ್‌ ಪುಸ್ತಕದಲ್ಲೇ ಜನರ ಸಮಸ್ಯೆಗಳನ್ನು ದಾಖಲಿಸಲಾಗಿದೆ. ಸಾಮಾನ್ಯ ಜನರ ಸಮಸ್ಯೆಗಳ ಯಾವ ಮನವಿಗೂ ತಹಸೀಲ್ದಾರ್‌ ಕಚೇರಿಯಲ್ಲಿ ಪರಿಹಾರ ಸಿಗದಿರುವುದು ಬೆಳಕಿಗೆ ಬಂದಿದೆ.
5
+ ಆದರೂ ಇ-ಆಫೀಸ್‌‍ ಮೂಲಕ ಜನರ ಅರ್ಜಿಯನ್ನು ಕಳುಹಿಸಲಾಗಿದೆ ಎಂದು ತಹಸೀಲ್ದಾರ್‌ ತಪ್ಪು ಮಾಹಿತಿ ನೀಡಿದ್ದಾರೆ. ಕೂಡಲೇ ಲೆಡ್ಜರ್‌ ಪರಿಶೀಲಿಸಿದ ಸಚಿವರು, ಇ-ಆಫೀಸ್‌‍ ಆರಂಭಿಸದಿರುವ ಬಗ್ಗೆ ಸ್ಥಳದಲ್ಲೇ ತಹಸೀಲ್ದಾರರಿಗೆ ಚಳಿ ಬಿಡಿಸಿದ್ದಾರೆ.
eesanje/url_46_50_2.txt ADDED
@@ -0,0 +1,5 @@
 
 
 
 
 
 
1
+ ಮಕ್ಕಳ ತಟ್ಟೆಯಿಂದ ಮೊಟ್ಟೆ ಕಿತ್ತುಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಅಮಾನತು
2
+ ಬೆಂಗಳೂರು,ಆ.10-ಅಂಗನವಾಡಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.
3
+ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷೀ ಹಾಗೂ ಸಹಾಯಕಿ ಶಹನಾಜ್‌ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಸಚಿವೆ ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್‌ ಮಾಡುವಂತೆ ಸೂಚಿಸಿದ್ದಾರೆ. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ.
4
+ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ, ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲೆಂದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇನೆ.
5
+ ಆದರೆ ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್‌ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದ ಮೊಟ್ಟೆ ಕಸಿದುಕೊಂಡಿದ್ದಾರೆ. ವಿಡೀಯೋ ನೋಡಿದರೆ ಕರುಳು ಚುರ್‌ ಎನ್ನುತ್ತದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ವಜಾ ಮಾಡಲು ಸೂಚಿಸಿದ್ದೇನೆ. ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವತೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.ಅಲ್ಲದೆ, ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
eesanje/url_46_50_3.txt ADDED
@@ -0,0 +1,8 @@
 
 
 
 
 
 
 
 
 
1
+ ವ್ಯಾಪಾರಿಗಳೇ ಹುಷಾರ್, ವಂಚನೆಗೆ ಇಳಿದಿದೆ ‘ಎಮರ್ಜೆನ್ಸಿ’ ಗ್ಯಾಂಗ್
2
+ ಬೆಂಗಳೂರು,ಆ.10-ವ್ಯಾಪಾರಿಗಳನ್ನೇ ಟಾರ್ಗೆಟ್‌ ಮಾಡಿಕೊಂಡು ಮೆಡಿಕಲ್‌ ಎಮರ್ಜೆನ್ಸಿಯೊಂದು ನಂಬಿಸಿ ಅವರಿಂದ ಹಣ ಪಡೆದು ಮೊಬೈಲ್‌ಗೆ ಗೂಗಲ್‌ ಪೇ ಮಾಡುವುದಾಗಿ ಹೇಲಿ ಹಣ ಹಿಂದಿರುಗಿಸದೇ ವಂಚಿಸುತ್ತಿರುವ ಜಾಲವಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಿದೆ.
3
+ ತಂತ್ರಜ್ಞಾನ ಮುಂದುವರೆದಂತೆ ಸೈಬರ್‌ ಖದೀಮರು ಹೆಚ್ಚಾಗುತ್ತಿದ್ದಾರೆ. ಡಿಜಿಟಲ್‌ ಇಂಡಿಯಾ ಎಂದು ಜನತೆ ತಮ ಬಳಿ ಹಣವಿಟ್ಟುಕೊಳ್ಳದೆ, ಫೋನ್‌ಪೇ ಎಂದು ಮೊಬೈಲ್‌ಗಳನ್ನು ಬಳಸುತ್ತಿರುವುದರಿಂದ ಇದನ್ನೇ ಬಂಡವಾಳವಾಗಿಸಿಕೊಳ್ಳುತ್ತಿರುವ ಖದೀಮರ ಮೋಸದ ಆಟಕ್ಕೆ ವ್ಯಾಪಾರಿಗಳು ದಾಳವಾಗುತ್ತಿರುವುದು ವಿಷಾದಕರ.
4
+ ತಮಗೆ ಮೆಡಿಕಲ್‌ ಎಮರ್ಜೆನ್ಸಿ ಇದೆ, ಕೂಡಲೇ ಹಣ ಬೇಕಾಗಿದೆ, ತಾವು ಹಣ ಕೊಟ್ಟರೆ ನಿಮ ಅಕೌಂಟ್‌ಗೆ ಗೂಗಲ್‌ ಪೇ ಅಥವಾ ಫೋನ್‌ ಪೇ ಮಾಡುವುದಾಗಿ ನಂಬಿಸಿ ಅಂದ್ರಹಳ್ಳಿಯ ಸೈಬರ್‌ ಸೆಂಟರ್‌ ಮಾಲೀಕನನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ.
5
+ ಸೈಬರ್‌ ಸೆಂಟರ್‌ಗೆ ಹೋದ ಖದೀಮ ಮೆಡಿಕಲ್‌ ಎಮರ್ಜೆನ್ಸಿ ಇದೆ, ನೀವು 10 ಸಾವಿರ ಹಣ ಕೊಟ್ಟರೆ ನಿಮ ಅಕೌಂಟ್‌ಗೆ ಹಾಕುವುದಾಗಿ ಹೇಳಿದ್ದಾನೆ. ಅಷ್ಟು ಹಣವಿಲ್ಲದಿದ್ದರೆ 5 ಸಾವಿರವಾದರೂ ಕೊಡಿ ಎಂದು ಮಾಲೀಕನಿಗೆ ಮರಳು ಮಾಡಿದ್ದಾನೆ.
6
+ ಸೈಬರ್‌ ಮಾಲೀಕ ಹಣಕೊಟ್ಟ ನಂತರ ಅಂಗಡಿಯಲ್ಲಿದ್ದ ಸ್ಕ್ಯಾನರ್‌ ಅನ್ನು ಸ್ಕ್ಯಾನ್‌ ಮಾಡಿದ ರೀತಿ ನಟಿಸಿ ನಂತರ ನೆಟ್‌ ಆಫ್‌ ಮಾಡಿಕೊಂಡು, ಅದು ವರ್ಕ್‌ ಆಗ್ತಿಲ್ಲ, ನಿಮ ಮೊಬೈಲ್‌ ನಂಬರ್‌ಗೆ ಹಾಕುತ್ತೇನೆಂದು ಹೇಳಿ, ಮೊದಲೇ ಸ್ಕ್ರೀನ್‌ ಶಾಟ್‌ ಮಾಡಿಕೊಂಡಿದ್ದ ಫೇಕ್‌ ಆ್ಯಪ್‌ ಮುಖಾಂತರ ಪೇಮೆಂಟ್‌ ಸಕ್ಸಸ್‌‍ ಎಂಬ ಮೆಸೇಜ್‌ ತೋರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
7
+ ಸೈಬರ್‌ ಸೆಂಟರ್‌ ಮಾಲೀಕ ತನ್ನ ಮೊಬೈಲ್‌ ಪರಿಶೀಲಿಸಿಕೊಂಡಾಗ ಖಾತೆಗೆ ಬಾರದಿರುವುದು ಗೊತ್ತಾಗಿದೆ. ತಕ್ಷಣ ಸಿಸಿಟಿವಿಯನ್ನು ಪರಿಶೀಲಿಸಿದಾಗ ವಂಚಕನ ಮೋಸದಾಟ ಸೆರೆಯಾಗಿರುವುದು ಗಮನಕ್ಕೆ ಬಂದು ಆ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಅಪ್ಲೋಡ್‌ ಮಾಡಿ, ಯಾರೂ ಸಹ ಈ ರೀತಿ ಮೋಸ ಹೋಗದಿರಿ ಎಂದು ಅವಲತ್ತುಕೊಂಡಿದ್ದಾರೆ.
8
+ ಈ ವಂಚಕ ಈ ಅಂಗಡಿಯಷ್ಟೇ ಅಲ್ಲದೆ, ಅಂದ್ರಹಳ್ಳಿ, ತಿಗಳರ ಪಾಲ್ಯ, ಡಿಗ್ರೂಪ್‌ ಸುತ್ತಮುತ್ತ ಅಂಗಡಿ ಮಾಲೀಕರಿಗೆ ವಂಚಿಸಿದ್ದಾನೆಂದು ಅವರು ತಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಅಂತಹ ಖದೀಮರು ಏನಾದರೂ ನಿಮ ಸುತ್ತಮುತ್ತವಿದ್ದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿರಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
eesanje/url_46_50_4.txt ADDED
@@ -0,0 +1,5 @@
 
 
 
 
 
 
1
+ , ವಿವಿಧ ಹುದ್ದೆಗಳ ಸ್ಪರ್ಧಾತಕ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ
2
+ ಬೆಂಗಳೂರು, ಆ.10-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಬಿಎಂಟಿಸಿ(ನಿರ್ವಾಹಕರು-ಕಲ್ಯಾಣ ಕರ್ನಾಟಕ), ಕೆಯುಡಬ್ಲ್ಯುಎಸ್‌‍ಡಿಬಿ (ಪ್ರಥಮದರ್ಜೆ ಸಹಾಯಕರು) ಮತ್ತು ಕೆಕೆಆರ್‌ಟಿಸಿ ಸಂಸ್ಥೆಗಳಲ್ಲಿನ ಖಾಲಿ ರುವ ವಿವಿಧ ಹುದ್ದೆಗಳ ಸ್ಪರ್ಧಾತಕ ಪರೀಕ್ಷೆಯ ಅಂತಿಮ ಅಂಕಟ್ಟಿಯನ್ನು ಪ್ರಕಟಿಸಲಾಗಿದೆ.
3
+ ಕೆಇಎ ವೆಬ್‌ಸೈಟಿನಲ್ಲಿ ಅಂತಿಮ ಅಂಕ ಪಟ್ಟಿ ಪ್ರಕಟಿಸಿದ್ದು, ಸಂಬಂಧಪಟ್ಟ ಸಂಸ್ಥೆಗಳಿಗೆ ಅಂತಿಮ ಅಂಕಪಟ್ಟಿ ಹಸ್ತಾಂತರಿಸಲಾಗುವುದು. ಆಯಾ ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಿವೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.
4
+ ಈ ಮೂರು ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಸ್ಪರ್ಧಾತಕ ಪರೀಕ್ಷೆಯನ್ನು ಕೆಇಎ ಜುಲೈ 13 ಮತ್ತು 14ರಂದು ನಡೆಸಿ, ಜು.16ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿತ್ತು.ಜು.18ರವರೆಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿದ್ದು,
5
+ ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ಜು.24ರಂದು ಪ್ರಕಟಿಸಲಾಗಿತ್ತು. ತಾತ್ಕಾಲಿಕ ಅಂಕಪಟ್ಟಿಯ ಬಗ್ಗೆ ಆ.3ರವರೆಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಅಂಕಪಟ್ಟಿ ಪ್ರಕಟಿಸಿರುವುದಾಗಿ ಕೆಇಎ ತಿಳಿಸಿದೆ.
eesanje/url_46_50_5.txt ADDED
@@ -0,0 +1,6 @@
 
 
 
 
 
 
 
1
+ ಕಾಲಕಾಲಕ್ಕೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ
2
+ ಬೆಂಗಳೂರು,ಆ.10-ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ನಿಧನ, ನಿವೃತ್ತಿ ಮತ್ತಿತರ ಕಾರಣಗಳಿಂದ ಖಾಲಿಯಾಗುವ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.ಕೇಂದ್ರ ಸರ್ಕಾರದ ಅಧೀನದ ಎಲ್‌ಐಸಿ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌‍.ದೀಕ್ಷಿತ್‌ ಹಾಗೂ ನ್ಯಾಯಮೂರ್ತಿ ವಿಜಯಕುಮಾರ್‌ ಎ. ಪಾಟೀಲ್‌ ಅವರಿದ್ದ ಧಾರವಾಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.
3
+ ಸಿಬ್ಬಂದಿಗಳ ನಿಧನ, ನಿವೃತ್ತಿ ಅಥವಾ ವಜಾಗೊಳಿಸಿದ ಪ್ರಕರಣಗಳಲ್ಲಿ ಹುದ್ದೆಗಳು ಖಾಲಿಯಾಗುತ್ತಿರುತ್ತವೆ. ಅವುಗಳನ್ನು ಅನಿರ್ಧಿಷ್ಟಾವಧಿಗೆ ಹಾಗೆಯೇ ಬಿಟ್ಟರೆ ಅದು ಸಾರ್ವಜನಿಕ ಆಡಳಿತದ ಮೇಲೆ ಪರಿಣಾಮ ಬೀರುವುದರ ಜೊತೆಗೆ ಹಲವು ಅರ್ಹರು ಅನರ್ಹರಾಗಬೇಕಾಗುತ್ತದೆ. ಅವರ ವಯೋಮಿತಿ ಮೀರುತ್ತದೆ.
4
+ ಕಾಲಕಾಲಕ್ಕೆ ನೇಮಕಾತಿ ಪ್ರಕ್ರಿಯೆ ನಡೆಯದ ಹಿನ್ನೆಲೆಯಲ್ಲಿ ಉದ್ಯೋಗಕ್ಕೆ ಅರ್ಹರಾಗಿರುವ ಯುವಜನಾಂಗ ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಮಾಡದಿರುವುದರಿಂದ ಸಂವಿಧಾನ ಖಾತ್ರಿ ಪಡಿಸಿರುವ ಸಾರ್ವಜನಿಕ ಉದ್ಯೋಗದ ಅವಕಾಶದಿಂದ ಬಹುದೊಡ್ಡ ಸಂಖ್ಯೆಯ ಯುವಜನತೆ ವಂಚಿತವಾಗಬೇಕಾಗುತ್ತದೆ ಎಂದು ತನ್ನ ಆದೇಶದಲ್ಲಿ ಹೇಳಿದೆ.ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇಡೀ ವ್ಯವಸ್ಥೆಯನ್ನು ಕಾಡುತ್ತಿದೆ. ಈ ಕಾಲಘಟ್ಟದಲ್ಲಿ ಖಾಲಿ ಹುದ್ದೆಗಳಿಗೆ ನಿಯಮಿತವಾಗಿ ಭರ್ತಿ ಮಾಡುವಂತಹ ಕೆಲಸ ಆಗಬೇಕು.
5
+ ಎಲ್‌ಐಸಿ ಸರ್ಕಾರಿ ಒಡೆತನದ ಸಂಸ್ಥೆಯಾಗಿದೆ. ಅದು ಮಾದರಿ ಉದ್ಯೋಗದಾತರಂತೆ ನಡೆದುಕೊಳ್ಳಬೇಕು. ಖಾಸಗಿ ಸಂಸ್ಥೆಗಳಂತೆ ನಿರ್ಲಕ್ಷದಿಂದ ವರ್ತಿಸಬಾರದು. ನಿಗದಿಯಂತೆ ನೇಮಕ ಪ್ರಕ್ರಿಯೆ ನಡೆಸಬೇಕೆಂದು ನ್ಯಾಯಾಲಯ ತಿಳಿಸಿದೆ.
6
+ ಪ್ರಕರಣದ ಹಿನ್ನೆಲೆ :ಎಲ್‌ಐಸಿಯಲ್ಲಿ 2020 ರ ಜ.14 ರಿಂದ 2022 ರ ಜ.14 ರ ಅವಧಿಯಲ್ಲಿ ಖಾಲಿಯಾಗಿದ್ದ ಹುದ್ದೆಗೆ ಧಾರವಾಡದ ಮಾಳಮಡ್ಡಿಯ ಸೌರಭ್‌ ಅವರನ್ನು ನೇಮಕ ಮಾಡುವಂತೆ ಹೈಕೋರ್ಟ್‌ ಏಕಸದಸ್ಯ ಪೀಠ 2024 ರ ಫೆ.14 ರಂದು ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲನವಿಯನ್ನು ಆಲಿಸಿದ್ದ ನ್ಯಾಯಪೀಠ ಏಕಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿದಿದೆ.
eesanje/url_46_50_6.txt ADDED
@@ -0,0 +1,7 @@
 
 
 
 
 
 
 
 
1
+ ವಾಲ್ಮೀಕಿ ನಿಗಮ ಹಗರಣದ ಆರೋಪಿ ಸತ್ಯನಾರಾಯಣನನ್ನ ಇಡಿ ವಶಕ್ಕೆ ನೀಡಲು ಹೈಕೋರ್ಟ್‌ ಆದೇಶ
2
+ ಬೆಂಗಳೂರು,ಆ.10-ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸತ್ಯನಾರಾಯಣ ವರ್ಮ ಅವರನ್ನು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕೆಂದು ಎಸ್‌‍ಐಟಿಗೆ ಹೈಕೋರ್ಟ್‌ ಆದೇಶಿಸಿದೆ.
3
+ ಆ.2 ರಂದು ಸತ್ಯನಾರಾಯಣ ವರ್ಮ ಅವರನ್ನು ಎಸ್‌‍ಐಟಿ ಕಸ್ಟಡಿಗೆ ನೀಡಿರುವ ಆದೇಶ ರದ್ದುಪಡಿಸುವಂತೆ ಕೋರಿ ಇ.ಡಿ. ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ತನಿಖೆಗಾಗಿ ಆ.13 ರಂದು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡುವಂತೆ ಆದೇಶ ನೀಡಿದ್ದಾರೆ.
4
+ ಸತ್ಯನಾರಾಯಣವರ್ಮ ಅವರ ಎಸ್‌‍ಐಟಿ ಕಸ್ಟಡಿ ಆ.12 ರಂದು ಮುಗಿಯುತ್ತದೆ. 13 ರಂದು ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸುವ ಸಂಬಂಧ ತನಿಖಾಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕೆಂದು ನ್ಯಾಯಪೀಠ ಸೂಚನೆ ನೀಡಿದೆ.
5
+ ಇ.ಡಿ. ಪರ ವಾದ ಮಂಡಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರಸನ್ನಕುಮಾರ್‌ರವರು ವರ್ಮ ವಿರುದ್ಧ ಇ.ಡಿ. ನ್ಯಾಯಾಲಯ ಬಾಡಿ ವಾರಂಟ್‌ ಜಾರಿ ಮಾಡಿರುವುದು ಬಾಕಿ ಇರುವಾಗ ಅದನ್ನು ಈ ರೀತಿ ಮಾಡಲಾಗುವುದು. ವಿಶೇಷ ನ್ಯಾಯಾಲಯ ಬಾಡಿ ವಾರಂಟ್‌ ಜಾರಿ ಮಾಡಿದೆ ಎಂದು ಪೀಠಕ್ಕೆ ವಿವರಣೆ ನೀಡಿದರು.
6
+ ಎಸ್‌‍ಐಟಿ ಪರವಾಗಿ ಹಾಜರಾಗಿದ್ದ ಸರ್ಕಾರಿ ವಿಶೇಷ ಅಭಿಯೋಜಕ ಬಿ.ಎನ್‌.ಜಗದೀಶ್‌ ಅವರು ವಾದ ಮಂಡಿಸಿ ಆ.22 ರಂದು ಇ.ಡಿ. ನ್ಯಾಯಾಲಯವು ಬಾಡಿ ವಾರಂಟ್‌ಗೆ ಆದೇಶ ಮಾಡಿದಾಗ ಇ.ಡಿ. ವಕೀಲರು ವರ್ಮ ಪೊಲೀಸ್‌‍ ಕಸ್ಟಡಿಯಲ್ಲಿದ್ದಾರೆಂದು ಸಂಬಂಧಿತ ನ್ಯಾಯಾಲಯಕ್ಕೆ ತಿಳಿಸಿಲ್ಲ. ಈಗ ವರ್ಮ ಅವರ ಕಸ್ಟಡಿ ಅವಧಿ ಆ.12 ಕ್ಕೆ ಮುಗಿಯುತ್ತದೆ. ಆನಂತರ ಇ.ಡಿ. ವಶಕ್ಕೆ ತೆಗೆದುಕೊಳ್ಳಬಹುದು ಎಂದರು.
7
+ ಉಳೆದೆಲ್ಲಾ ಆರೋಪಿಗಳನ್ನೂ ಅವರ ಕಸ್ಟಡಿಗೆ ಪಡೆದಿದ್ದಾರೆ. ಸದ್ಯ ಈ ಪ್ರಕರಣದಲ್ಲಿ 49 ಕೋಟಿ ರೂ. ಜಪ್ತಿ ಮಾಡಿದ್ದೇವೆ. ಇನ್ನೂ 30 ಕೋಟಿ ಜಪ್ತಿ ಮಾಡಬೇಕಾಗಿದೆ. ಸತ್ಯನಾರಾಯಣ ವರ್ಮ ಅವರೇ ಹಗರಣದ ಪ್ರಮುಖ ಆರೋಪಿಯೆಂದು ಹೇಳಿದರು.
eesanje/url_46_50_7.txt ADDED
@@ -0,0 +1,7 @@
 
 
 
 
 
 
 
 
1
+ ನಾಳೆ ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಮಾರೋಪ
2
+ ಬೆಂಗಳೂರು,ಆ.9-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡ ಬೇಕೆಂದು ಆಗ್ರಹಿಸಿ ಎನ್ಡಿಎ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಳೆ ಮುಕ್ತಾಯವಾಗಲಿದೆ.
3
+ ಆ.3ರಂದು ಮುಡಾ ಹಗರಣ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನಿಂದ ಜಂಟಿ ಪಾದಯಾತ್ರೆಯನ್ನು ಬಿಜೆಪಿ ಜೆಡಿಎಸ್ ಆರಂಭಿಸಿದ್ದವು.
4
+ ಬೆಂಗಳೂರಿನಿಂದ ಶ್ರೀರಂಗಪಟ್ಟಣದವರೆಗೆ 100 ಕಿ.ಮೀ ಪಾದಯಾತ್ರೆಯನ್ನು ಮಿತ್ರ ಪಕ್ಷಗಳು ಪೂರ್ಣಗೊಳಿಸಿವೆ. ಇಂದು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಪಾದಯಾತ್ರೆ ತೆರಳಲಿದೆ.
5
+ ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಪಾದ ಯಾತ್ರೆಯ ಅದ್ಧೂರಿ ಸಮಾರೋಪ ಸಮಾರಂಭ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ನಾಯಕತ ನೇತೃತ್ವದಲ್ಲಿ ಪಾದಯಾತ್ರೆಯನ್ನು ಆರಂಭಿಸಲಾಗಿತ್ತು.
6
+ ಪಾದಯಾತ್ರೆಯುದ್ದಕ್ಕೂ ಎರಡು ಪಕ್ಷಗಳ ನಾಯಕರು, ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಗರಣಗಳ ಆರೋಪದ ಲಕಗಳನ್ನು ಪ್ರದರ್ಶಿಸಿ ಸಾಗಿದರು. ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಉಭಯ ಪಕ್ಷಗಳ ನಾಯಕರು ಪ್ರತಿದಿನ ನಡೆದ ಬಹಿರಂಗ ಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
7
+ ಮುಖ್ಯಮಂತ್ರಿ ರಾಜೀನಾಮೆ ನೀಡುವಂತೆ ಪಟ್ಟು ಹಿಡಿದು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಪಾದಯಾತ್ರೆಗೆ ಅಪಾರ ಜನ ಬೆಂಬಲ ವ್ಯಕ್ತವಾಗಿದ್ದು, ಮೈಸೂರಿನಲ್ಲಿ ನಡೆಯುವ ಸಮಾರೋಪವನ್ನು ಬೃಹತ್ ಮಟ್ಟದಲ್ಲಿ ನಡೆಸಲು ಮಿತ್ರ ಪಕ್ಷಗಳು ಉದ್ದೇಶಿಸಿವೆ.
eesanje/url_46_50_8.txt ADDED
@@ -0,0 +1,21 @@
 
 
 
 
 
 
 
 
 
 
 
 
 
 
 
 
 
 
 
 
 
 
1
+ ನಾನು ಸುಮ್ಮನೆ ಕೂರುವವನಲ್ಲ : ಬಿಜೆಪಿ-ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗು
2
+ ಮೈಸೂರು ಆ 9:ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು.
3
+ ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು.
4
+ ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.
5
+ ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ ಎಂದರು.ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ.
6
+ ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
7
+ ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.
8
+ ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ��� ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು ಎಂದು ತಮ್ಮ ಸಚ್ಚಾರಿತ್ರ್ಯದ ಚರಿತ್ರೆಯನ್ನು ಬಿಚ್ಚಿಟ್ಟರು.
9
+ ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ ಎಂದರು.
10
+ ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಘಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಳುಗಾಡಿಸಲು ಸಾಧ್ಯವಿಲ್ಲ ಎಂದರು.
11
+ ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದರು.
12
+ ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ ಯವರು ತನಿಖೆ ನಡೆಸಿದ್ದಾರೆ. ಆದರೂ ಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.
13
+ ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಕರೆ ನೀಡಿದರು.
14
+ ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ?ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ ಎಂದರು.
15
+ ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡು�� ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು.
16
+ 15 ಬಜೆಟ್ ಮಂಡಿಸಿದವನು ನಾನು. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ.
17
+ ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮಬೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.
18
+ ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ ಎಂದರು.
19
+ ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.
20
+ ಹೇಳಿ, ಇದರಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನು ಹೇಳಿ? ನಾನು ತಪ್ಪು ಮಾಡಿದ್ದೀನಾ ಹೇಳಿ ಎಂದು ಪ್ರಶ್ನಿಸಿದರು.
21
+ ನಮ್ಮ ಜಮೀನು ಪಡೆದು ಸೈಟು, ಪಾರ್ಕು ಮಾಡಿ, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮೂಡಾ ಎನ್ನುತ್ತಾ ಮುಡಾ ಸೈಟು ಹಂಚಿಕೆಯಲ್ಲಿ ಮೂಡಾ ಮಾಡಿರುವ ಲೋಪಗಳನ್ನು ವಿವರಿಸಿದರು.
eesanje/url_46_50_9.txt ADDED
@@ -0,0 +1,5 @@
 
 
 
 
 
 
1
+ ಸಿಎಂ ಮನೆಗೆ ಹೋಗುವ ಕಾಲ ಹತ್ತಿರ : ಬಿಎಸ್ವೈ
2
+ ಮೈಸೂರು, ಆ.9-ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡಸಿದ್ದಾರೆ.ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಆಗಮಿಸಿದ ಯಡಿಯೂರಪ್ಪ ಅವರು ಚಾಮುಂಡೇಶ್ವರಿ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
3
+ ಸಿದ್ದರಾಮಯ್ಯ ಅವರು ನನ್ನ ನಿವೃತ್ತಿ ಮಾತನಾಡಿದ್ದಾರೆ ,ಯಾರು ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ. ಅವರು ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಅರೀಗ ಮನಬಂದಂತೆ ಮಾತಾಡುತ್ತಿದ್ದಾರೆ, ಮಾತಾಡಲಿ ಎಂದು ಗುಡುಗಿದರು.
4
+ ನಾಳೆ ಮೂರು ಲಕ್ಷಕ್ಕೂ ಅಧಿಕ ಜನ ನಮ್ಮ ಬೃಹತ್ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಪಾದಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ತಾ ಇದೆ. ಭ್ರಷ್ಟ ಸರ್ಕಾರ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ. ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.
5
+ ಪೊಕ್ಸೋ ಕೇಸ್ನಲ್ಲಿ ನಾಳೆ ಕೋರ್ಟ್ನಲ್ಲಿ ತೀರ್ಮಾನ ಆದಾಗ ಎಲ್ಲಾ ಬಹಿರಂಗವಾಗುತ್ತೆ. ಅಲ್ಲಿಯವರೆಗೆ ನಾನು ಏನು ಮಾತಾಡಲ್ಲ. ಅದಾದ ಬಳಿಕ ಸಿದ್ದರಾಮಯ್ಯಗೆ ಉತ್ತರ ಸಿಗುತ್ತೆ. ಅವರು ಹತಾಶೆಯ ಮನೋಭಾವದಲ್ಲಿ ಇರೋದನ್ನು ಜನರೇ ತೀರ್ಮಾನ ಮಾಡ್ತಾರೆ ಎಂದರು.ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ ಆದರೆ ತಮ್ಮ ಪತ್ನಿಗೆ ಬೆಲೆ ಬಾಳುವ ಸೈಟ್ಗಳನ್ನು ಕೊಟ್ಟಿದ್ದಾರೆ ಎಂದರು.
eesanje/url_46_51_1.txt ADDED
@@ -0,0 +1,5 @@
 
 
 
 
 
 
1
+ ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿ ಕುರಿತು ಗಡ್ಕರಿ ಜೊತೆ ದೇವೇಗೌಡರ ಚರ್ಚೆ
2
+ ನವದೆಹಲಿ, ಅ.9-ಶಿರಾಡಿ ಘಾಟ್‌ ರಸ್ತೆ ಸೇರಿದಂತೆ ರಾಜ್ಯದ ಹೆದ್ದಾರಿ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದ್ದಾರೆ.
3
+ ಈ ವೇಳೆ ಮಾಜಿ ಪ್ರಧಾನಿಯ ಬೇಡಿಕೆಗೆ ಸಕಾರಾತಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಕರ್ನಾಟಕ ಸರ್ಕಾರ ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಿದರೆ ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.
4
+ ಈ ಯೋಜನೆಗೆ ಕೆಲವು ಸಾವಿರ ಕೋಟಿಗಳಷ್ಟು ಹಣ ಹೂಡಿಕೆ ಮಾಡಲು ತಮ ಇಲಾಖೆ ಪರಿಗಣಿಸುವುದು ಎಂದು ನಿತಿನ್‌ ಗಡ್ಕರಿ ಅವರು ದೇವೇಗೌಡರಿಗೆ ಭರವಸೆ ನೀಡಿದ್ದಾರೆ.
5
+ ಅಭಿವೃದ್ಧಿ ಯೋಜನೆಯು ಸುರಂಗ ತಂತ್ರಜ್ಞಾನ ಬಳಸುವುದನ್ನು ಒಳಗೊಂಡಿರುತ್ತದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಸ್ಪಂದಿಸಬೇಕು ಎಂದು ಸಚಿವರು ಹೇಳಿದ್ದಾರೆ. ಈ ಮಾಹಿತಿಯನ್ನು ಮಾಜಿ ಪ್ರಧಾನಿ ತಮ ಎಕ್‌್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
eesanje/url_46_51_10.txt ADDED
@@ -0,0 +1,6 @@
 
 
 
 
 
 
 
1
+ ಆಗಸ್ಟ್‌ನಲ್ಲಿ ತಗ್ಗಿದ ಮಳೆ ಪ್ರಮಾಣ : ನದಿಗಳ ಪ್ರವಾಹವೂ ಇಳಿಕೆ
2
+ ಬೆಂಗಳೂರು,ಆ.8- ಜುಲೈನಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಆಗಸ್ಟ್‍ನಲ್ಲಿ ಮಂಕಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನದಿಗಳ ಪ್ರವಾಹವು ಇಳಿಕೆಯಾಗಿದೆ. ತುಂಗಭದ್ರಾ, ಕೃಷ್ಣ ನದಿ ಹೊರತುಪಡಿಸಿ ಬಹುತೇಕ ನದಿಗಳ ಅಬ್ಬರ ತಗ್ಗಿದೆ. ಇದರಿಂದ ಪ್ರಮುಖ ಜಲಾಶಯಗಳ ಒಳಹರಿವು ಗಣನೀಯವಾಗಿ ಇಳಿಕೆಯಾಗಿದ್ದು, ಹೊರಹರಿವು ಕೂಡ ಕಡಿಮೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಮಳೆ ಮುಂದುವರೆಯಲಿದೆ. ಆದರೆ ಕರಾವಳಿ ಮತ್ತು ಮಲೆನಾಡಿನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ.
3
+ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಂದೆರೆಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಆ.1 ರಿಂದ ಇಲ್ಲಿವರೆಗೆ ಮಳೆ ಪ್ರಮಾಣ ಇಲ್ಲಿಯವರೆಗೆ 76 ಮಿ.ಮೀ. ಮಳೆಯಾಗಿದೆ.
4
+ ಈ ಅವಧಿಯಲ್ಲಿ 67 ಮಿ.ಮೀ. ವಾಡಿಕೆ ಪ್ರಮಾಣದ ಮಳೆ ರಾಜ್ಯದಲ್ಲಿದ್ದು, ವಾಡಿಕೆಗಿಂತ ಶೇ. 15ರಷ್ಟು ಹೆಚ್ಚು ಮಳೆಯಾಗಿದೆ. ಜೂನ್‍ನಿಂದ ಇಲ್ಲಿವರೆಗೆ 537 ಮಿ.ಮೀ. ವಾಡಿಕೆ ಮಳೆ ಪ್ರಮಾಣವಿದ್ದು, 688 ಮಿ.ಮೀ.ನಷ್ಟು ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಶೇ.28 ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ತುಂಗಾ, ಭದ್ರಾ, ಶರಾವತಿ, ಕಾವೇರಿ, ಹೇಮಾವತಿ, ಕಬಿನಿ ನದಿಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಆತಂಕದ ಸ್ಥಿತಿ ದೂರವಾಗಿದೆ.
5
+ ಆರ್ಭಟಿಸುತ್ತಿದ್ದ ಮಳೆ ಕಳೆದ ಒಂದು ವಾರದಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಶಾಂತವಾಗಿದೆ. ಚದುರಿದಂತೆ ಮಳೆಯಾಗುತ್ತಿದ್ದರೂ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷ್ಣ ನದಿಯ ಪ್ರವಾಹ ಮಾತ್ರ ಇನ್ನೂ ತಗ್ಗಿಲ್ಲ. ಆಲಮಟ್ಟಿಗೆ 2.77 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ. ಅದೇ ರೀತಿ ನಾರಾಯಣಪುರ ಜಲಾಶಯಕ್ಕೂ 2 ಲಕ್ಷ ಕ್ಯೂಸೆಕ್ಸ್‍ಗೂ ಹೆಚ್ಚು ನೀರು ಹರಿದುಬರುತ್ತಿದೆ. ತುಂಗಭದ್ರಾ ಜಲಾಶಯಕ್ಕೂ 57 ಸಾವಿರ ಕ್ಯೂಸೆಕ್ಸ್ ಹೆಚ್ಚು ನೀರು ಹರಿದುಬರುತ್ತಿದೆ.
6
+ ಈಗಾಗಲೇ ಈ ಮೂರೂ ಜಲಾಶಯಗಳು ಭರ್ತಿಯ ಹಂತ ತಲುಪಿರುವುದರಿಂದ ಭಾರಿ ಪ್ರಮಾಣದಲ್ಲಿ ಜಲಾಶಯದಿಂದ ನದಿಗಳಿಗೆ ನೀರು ಬಿಡಲಾಗುತ್ತಿದೆ. ಇದರಿಂದ ಜಲಾನಯನ ಭಾಗದಲ್ಲಿ ಪ್ರವಾಹದ ಭೀತಿ ಮುಂದುವರೆದಿದೆ.
eesanje/url_46_51_11.txt ADDED
@@ -0,0 +1,6 @@
 
 
 
 
 
 
 
1
+ ಫ್ಯಾಸಿಸ್ಟ್ ಮನಃಸ್ಥಿತಿಯ ಎನ್‍ಡಿಎ ಸರ್ಕಾರ : ಸಿಎಂ ವಾಗ್ದಾಳಿ
2
+ ಬೆಂಗಳೂರು,ಆ.8- ಬಿಜೆಪಿ ನೇತೃತ್ವದ ಎನ್‍ಡಿಎ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರ ವಿರೋ„ಯಾಗಿದ್ದು, ಫ್ಯಾಸಿಸ್ಟ್ ಮನಃಸ್ಥಿತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ ಬೋರ್ಡ್‍ನ ಅಧಿಕಾರವನ್ನು ಮೊಟಕುಗೊಳಿಸುವ ಮಸೂದೆಯನ್ನು ಸಂಸತ್‍ನಲ್ಲಿ ಮಂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು.
3
+ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಲ್ಪಸಂಖ್ಯಾತರ ವಿರೋಧಿ ಎಂಬುದನ್ನು ಈ ಮಸೂದೆ ಸಾಬೀತುಪಡಿಸುತ್ತದೆ. ಎನ್‍ಡಿಎ ಜಾತ್ಯತೀತ ನಿಲುವಿಗೆ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಅವರು ಕೋಮುವಾದಿಗಳು ಎಂದು ಮುಖ್ಯಮಂತ್ರಿ ವಾಗ್ದಾಳಿ ನಡೆಸಿದರು.ಬಿ.ಕೆ.ಹರಿಪ್ರಸಾದ್ ನಮ್ಮ ಪಕ್ಷದ ನಾಯಕರು. ಅವರು ಭೇಟಿಯಾಗುವುದರಲ್ಲಿ ವಿಶೇಷ ಏನೂ ಇಲ್ಲ. ಬಹಳ ದಿನದಿಂದ ನಾವು ಭೇಟಿಯಾಗಿರಲಿಲ್ಲ. ಹೀಗಾಗಿ ಸುಮ್ಮನೇ ಪರಸ್ಪರ ಉಭಯ ಕುಶಲೋಪರಿ ಚರ್ಚಿಸಿದ್ದೇವೆ ಎಂದು ಹೇಳಿದರು.
4
+ ಜನಾಂದೋಲನದ ವಿಚಾರದ ಬಗ್ಗೆ ನಾಳೆ ಮೈಸೂರಿನಲ್ಲೇ ಮಾತನಾಡುವುದಾಗಿ ತಿಳಿಸಿದರು. ಇದಕ್ಕೂ ಮುನ್ನ ವಿಧಾನಸೌಧದ ಮುಂಭಾಗದಲ್ಲಿರುವ ಎಸ್.ನಿಜಲಿಂಗಪ್ಪ ಅವರ ಪ್ರತಿಮೆಗೆ ಪುಣ್ಯಸ್ಮರಣೆ ಅಂಗವಾಗಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಅವರು ತಮ್ಮ ಅಧಿಕಾರಾವಧಿಯುದ್ದಕ್ಕೂ ಕೆಲವು ಮೌಲ್ಯಗಳನ್ನು ಅಳವಡಿಸಿಕೊಂಡು ರಾಜಕೀಯ ಜೀವನ ನಡೆಸಿದರು.
5
+ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದರೆ ಅದಕ್ಕೆ ನಿಜಲಿಂಗಪ್ಪ ಅಡಿಗಲ್ಲು ಹಾಕಿದ್ದೇ ಕಾರಣ. ದೇಶ ಮತ್ತು ರಾಜ್ಯದಲ್ಲಿ ಹೆಚ್ಚು ನೀರಾವರಿಯಾಗಿದ್ದರೆ ಅದಕ್ಕೆ ನಿಜಲಿಂಗಪ್ಪನವರ ದೂರದೃಷ್ಟಿಯೇ ಕಾರಣ. ಅವರ ಮಾರ್ಗದರ್ಶನಗಳು ನಮಗೆ ಸದಾ ಅನುಕರಣೀಯ. ರಾಜ್ಯದ ಅಭಿವೃದ್ಧಿಯಲ್ಲಿ ಅವರ ಪಾತ್ರ ದೊಡ್ಡದು ಎಂದು ಹೇಳಿದರು.
6
+ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್, ಮುಖಂಡರಾದ ಎಚ್.ಎಂ.ರೇವಣ್ಣ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಪ್ರಕಾಶ್ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು.
eesanje/url_46_51_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ : ವಿಪಕ್ಷಗಳಿಗೆ ಸಿದ್ದು ತಿರುಗೇಟು
2
+ ಮೈಸೂರು, ಆ.7-ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್‌ ಮಾಡಿ ಸರ್ಕಾರ ಅಸ್ಥಿರ ಮಾಡಲು ಬಿಜೆಪಿ- ಜೆಡಿಎಸ್‌‍ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರಾಜ್ಯದ ಜನತೆ ಅವರ ಸುಳ್ಳನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳುಗಳಿಂದ ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಇದರಲ್ಲಿ ಬಿಜೆಪಿ- ಜೆಡಿಎಸ್‌‍ ನವರು ಯಶಸ್ವಿಯಾಗಲ್ಲ. ಈ ಹಿಂದೆ ಆಪರೇಷನ್‌ ಕಮಲ ಮಾಡಿದ್ದರು. ಆದರೆ ಅದು ಯಶಸ್ವಿಯಾಗಲಿಲ್ಲ. ಈಗ ನನ್ನನ್ನು ಮತ್ತೆ ಟಾರ್ಗೆಟ್‌ ಮಾಡಿದ್ದಾರೆ ಎಂದು ನೇರವಾಗಿ ಟೀಕಿಸಿದರು.
4
+ ರಾಜ್ಯಪಾಲರಿಂದ ನನಗೆ ಬಂದಿರುವುದು ಒಂದೇ ನೋಟೀಸ್‌‍. ಅದಕ್ಕೆ ಉತ್ತರ ನೀಡಿದ್ದೇನೆ. ಈ ನಡುವೆ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ರವರು ರಾಜ್ಯಪಾಲರನ್ನು ಭೇಟಿ ಮಾಡಿರುವುದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ಕಾನೂನಾತಕವಾಗಿ ನನ್ನ ತಪ್ಪಿಲ್ಲ ಎಂದು ರಾಜ್ಯಪಾಲರಿಗೆ ಮನವರಿಕೆಯಾಗಿರುತ್ತದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ವಿಪಕ್ಷಗಳು ಎಷ್ಟೇ ಸುಳ್ಳು ಹೇಳಿದರೂ ಅದನ್ನು ಎದುರಿಸುವ ಶಕ್ತಿ ನನಗಿದೆ. ಈ ಹಿಂದೆ ಬಿಜೆಪಿ ಭ್ರಷ್ಟಸರ್ಕಾರ ಆಡಳಿತ ನಡೆಸಿತ್ತು. ಅದರ ತನಿಖೆ ನಡೆಯುತ್ತಿದೆ.
6
+ ಹೀಗಿರುವಾಗ ಯಾವ ನೈತಿಕತೆಯಿಂದ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಮತ್ತು ರಾಜೀನಾಮೆ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು.ಬಿಎಸ್‌‍ ಯಡಿಯೂರಪ್ಪ ಅವರು ಕೋರ್ಟ್‌ ದಯೆಯಿಂದ ಹೊರಗಿದ್ದಾರೆ. ಈ ಇಳಿ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ. ರಾಜಕೀಯ ನಿವೃತ್ತಿಯಾಗಬೇಕಿತ್ತು.
7
+ ಆದರೆ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿಎಂ ರಾಜೀನಾಮೆ ನೀಡುತ್ತಾರೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಇವರಿಗೆ ಏನು ಹೇಳಬೇಕೋ ಗೊತ್ತಿಲ್ಲ ಎಂದು ಟೀಕಿಸಿದರು.ಕಳೆದ 2014ರಲ್ಲಿ ನಾನು ಸಿಎಂ ಆಗಿದ್ದಾಗ ನನ್ನ ಪತ್ನಿ ಮುಡಾಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಮೂಡಾ ಅಧಿಕಾರಿಗಳೇ ನನ್ನ ಗಮನಕ್ಕೆ ತಂದಿದ್ದರು. ಆಗ ನಾನು ಒಂದು ಗುಂಟೆ ಜಾಗವನ್ನೂ ಕೊಡಬೇಡಿ ಎಂದು ಹೇಳಿದ್ದೆನೆಂದು ಇದೇ ವೇಳೆ ತಿಳಿಸಿದರು.
8
+ 2021ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದಾಗ ಬಿಜೆಪಿ ಸರ್ಕಾರವಿತ್ತು. ಅವರು ಕಾನೂನು ರೀತಿಯಲ್ಲಿ ಬದಲಿ ನಿವೇಶನ ಕೊಟ್ಟಿದ್ದಾರೆ. ನಾನು ಸೈಟು ಪಡೆಯಬೇಕು ಎಂಬ ಉದ್ದೇಶವಿದ್ದಿದ್ದರೆ ಸಿಎಂ ಆಗಿದ್ದಾಗಲೇ ಸೈಟು ಕೊಡಿಸುತ್ತಿದ್ದೆ ಎಂದು ಸ್ಪಷ್ಟನೆ ನೀಡಿದರು.
9
+ ನಾನು ಯಾವುದೇ ಅಧಿಕಾರ ಪ್ರಭಾವ ಬಳಸಿಲ್ಲ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಜೈಲಿಗೆ ಹೋಗಿದ್ದ ಪ್ರಕರಣವೇ ಬೇರೆ. ಈಗಿನ ನನ್ನ ಮೇಲೆ ಬಂದಿರುವ ಆರೋಪಗಳೇ ಬೇರೆ ಎಂದು ಹೇಳಿದರು.ಮೈಸೂರಿನಲ್ಲಿ ಆ. 9ರಂದು ಬೃಹತ್‌ ಸಮಾವೇಶ ನಡೆಯಲಿದೆ. ಆ ಸಂದರ್ಭದಲ್ಲಿ ಎಲ್ಲರ ಹಗರಣಗಳನ್ನು ನಿಮ ಮುಂದೆ ಇಡುತ್ತೇನೆ ಎಂದು ಸಿಎಂ ಗುಡುಗಿದ್ದಾರೆ.
eesanje/url_46_51_2.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದೆಲ್ಲೆಡೆ ಮನೆಮಾಡಿದ ನಾಗರಪಂಚಮಿ ಸಂಭ್ರಮ
2
+ ಬೆಂಗಳೂರು,ಆ.9-ಎಲ್ಲೆಡೆ ನಾಗರಪಂಚಮಿಯ ಸಂಭ್ರಮ. ಹಿಂದೂ ಸಂಪ್ರದಾಯದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಕಲ್ಲಿನ ನಾಗಪ್ಪನಿಗೆ ಹಾಲೆರೆದು ಪೂಜಿಸುವ ವೈಶಿಷ್ಟ್ಯವಿದೆ. ಇಂದು ಶ್ರದ್ದಾಭಕ್ತಿಯಿಂದ ನಾಗಪ್ಪನಿಗೆ ಹಾಲು ಎರೆಯುವ ಮೂಲಕ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ನಾಗರಪಂಚಮಿಯನ್ನು ಆಚರಿಸಿದರು.
3
+ ಕುಕ್ಕೆ ಸುಬ್ರಹಣ್ಯೇಶ್ವರ ದೇವಸ್ಥಾನ, ದೊಡ್ಡಬಳ್ಳಾಪುರದ ಘಾಟಿ ಸುಬ್ರಹಣ್ಯ, ಕೆಂಗೇರಿಯ ಮುಕ್ತಿನಾಗ ದೇವಾಲಯ ಸೇರಿದಂತೆ ವಿವಿಧ ನಾಗದೇವಾಲಯಗಳಲ್ಲಿ ಭಕ್ತಿಭಾವದಿಂದ ನಾಗರಪಂಚಮಿಯನ್ನು ಆಚರಿಸಲಾಯಿತು.
4
+ ಕುಕ್ಕೆಸುಬ್ರಹಣ್ಯದಲ್ಲಿ ಶ್ರಾವಣ ಮಾಸದ ನಾಗಪಂಚಮಿಯಂದು ವಿಶೇಷ ಪೂಜೆಗಳು ಜರುಗಿದವು. ನಾಡಿನಾದ್ಯಂತ ಆಗಮಿಸಿದ ಭಕ್ತರು, ನಾಗಪೂಜೆ, ಮಂಡಲ ಪೂಜೆಗಳಲ್ಲಿ ಪಾಲ್ಗೊಂಡಿದ್ದರು. ರಾಜಧಾನಿ ಬೆಂಗಳೂರಿನ ಹಲವು ದೇವಾಲಯಗಳಲ್ಲೂ ಕೂಡ ನಾಗಾರಾಧನೆ ನಡೆಯಿತು. ಕಾಡು ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿರುವ ನಾಗದೇವನಿಗೆ ನಾಗಪಂಚಮಿ ನಿಮಿತ್ತ ಮಹಿಳೆಯರು ಹಾಲೆರೆದು ಪೂಜೆ ಸಲ್ಲಿಸಿದರು.
5
+ ರಾಜ್ಯದ ಬಹುತೇಕ ಕಡೆ ಈ ಹಬ್ಬವನ್ನು ಬಹಳ ವಿಶಿಷ್ಟವಾಗಿ ಆಚರಣೆ ಮಾಡಲಾಗುತ್ತದೆ. ಅದರಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಇಂದು ದೇವಾಲಯಗಳಲ್ಲಿರುವ ನಾಗರಕಲ್ಲು, ಹೊಲಗದ್ದೆಗಳಲ್ಲಿರುವ ಹುತ್ತ ಸೇರಿದಂತೆ ಹಲವೆಡೆ ತೆರಳಿ ಪೂಜೆ ಸಲ್ಲಿಸುವ ಮೂಲಕ ನಾಗರಪಂಚಮಿಯನ್ನು ಅಚರಿಸಲಾಯಿತು.
6
+ ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನಾಗರಪಂಚಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಂಚಮಿಯ 2ನೇ ದಿನವಾದ ಇಂದು ಹೆಣ್ಣುಮಕ್ಕಳು ಶುಚಿರ್ಭೂತರಾಗಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಾಗಬನಗಳಿಗೆ ತೆರಳಿ ಸರತಿಯಲ್ಲಿ ನಿಂತು ಕಲ್ಲಿನ ನಾಗಪ್ಪನಿಗೆ ಹಾಲೆರೆದು ಸಂಭ್ರಮಿಸಿದರು.
7
+ ವಿವಿಧ ತರಹದ ಉಸ್ಲಿ ಉಂಡೆ ಭಕ್ಷ್ಯಗಳನ್ನು ನಾಗಪ್ಪನಿಗೆ ನೈವೇದ್ಯ ಮಾಡಲಾಯಿತು. ಜಿಟಿಜಿಟಿ ಮಳೆಯ ನಡುವೆಯೂ ಮಹಿಳೆಯರು ನಾಗಬನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಉತ್ತರ ಕರ್ನಾಟಕದ ಭಾಗದಲ್ಲಿ ನಾಗರಪಂಚಮಿಯನ್ನು ಮೂರು ದಿನಗಳ ಕಾಲ ಆಚರಿಸುತ್ತಾರೆ.
8
+ ಮೊದಲೆರಡು ದಿನ ಮನೆಯಲ್ಲಿ ಪಂಚಮಿ ಆಚರಿಸಿ ಮೂರನೇ ದಿನವಾದ ಇಂದು ನಾಗಬನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಅಲ್ಲದೆ ಜೋಕಾಲಿಗಳನ್ನು ಕಟ್ಟಿ ಆಡುವ ಮೂಲಕ ಸಂಭ್ರಮಿಸುತ್ತಾರೆ.
9
+ ಕಲಿಯುಗದಲ್ಲಿ ದೇವರುಗಳು ಪ್ರತ್ಯಕ್ಷವಾಗಿ ಮಾನವನ ಕಣ್ಣಿಗೆ ಕಾಣುವುದಿಲ್ಲ, ವಿಗ್ರಹ ರೂಪದಲ್ಲಿ, ಶಿಲ್ಪ ರೂಪದಲ್ಲಿ, ಚಿತ್ರ ರೂಪಗಳಲ್ಲಿ ಆರಾಧನೆಗೊಳಪಡುತ್ತವೆ. ಆದರೆ ನಾಗದೇವರು ಮಾತ್ರ ಬಿಂಬ, ಪ್ರತಿಬಿಂಬ ರೂಪದಲ್ಲಿ ನಮ ಕಣ್ಣಿಗೆ ಪ್ರತ್ಯಕ್ಷವಾಗಿ ಕ���ಣುತ್ತದೆ. ಹಾಗಾಗಿ ಪ್ರತ್ಯಕ್ಷ ದೇವನ ಪೂಜೆಗೆ ಪ್ರಥಮ ಆದ್ಯತೆ ಸಲ್ಲುತ್ತದೆ.
eesanje/url_46_51_3.txt ADDED
@@ -0,0 +1,7 @@
 
 
 
 
 
 
 
 
1
+ ಅಸಮಾನತೆ ನಿಗ್ರಹಕ್ಕೆ ಸಂವಿಧಾನ ಶಕ್ತಿಯುತ ಸಾಧನ:
2
+ ನವದೆಹಲಿ,ಆ.8- ಅಸಮಾನತೆಯನ್ನು ನಿಗ್ರಹಿಸಲು ಸಂವಿಧಾನವು ಶಕ್ತಿಯುತ ಸಾಧನ ಮತ್ತು ಅಸಮಾನತೆಯ ವಿರುದ್ಧ ರಕ್ಷಿಸುವ ಉದ್ದೇಶದಿಂದ ಸಂಸ್ಥೆಗಳು ಮತ್ತು ರಚನೆಗಳನ್ನು ರಚಿಸುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.
3
+ ಸಂವಿಧಾನವು ಈ ಸಂಸ್ಥೆಗಳಲ್ಲಿ ತಪಾಸಣೆ ಮತ್ತು ಸಮತೋಲನವನ್ನು ಒದಗಿಸುತ್ತದೆ ಮತ್ತು ದೇಶದ ನಾಗರಿಕರಿಗೆ ಸಾಂಸ್ಥಿಕ ಆದ್ಯತೆಗಳು ಮತ್ತು ಕಟ್ಟುಪಾಡುಗಳನ್ನು ಸಹ ನಿಗದಿಪಡಿಸುತ್ತದೆ ಎಂದು ಅವರು ಹೇಳಿದರು. ಇಲ್ಲಿನ ಒಪಿ ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾನಿಲಯದ 13ನೇ ಘಟಿಕೋತ್ಸವ ಸಮಾರಂಭ ಮತ್ತು ಸಂಸ್ಥಾಪಕರ ದಿನಾಚರಣೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಜೆಐ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪ್ರಪಂಚದಲ್ಲಿ ಅದರ ಎಲ್ಲಾ ಅಂಶಗಳಲ್ಲಿ ಅನ್ಯಾಯವನ್ನು ಗುರುತಿಸುವಂತೆ ಉತ್ತೇಜಿಸಿದರು.
4
+ ಸಂವಿಧಾನವು ಅಂತಹ ಅಸಮಾನತೆಗಳನ್ನು ನಿಗ್ರಹಿಸಲು ಪ್ರಬಲ ಸಾಧನವಾಗಿದೆ. ಇದು ಅಸಮಾನತೆಗಳ ವಿರುದ್ಧ ರಕ್ಷಿಸಲು ಉದ್ದೇಶಿಸಿರುವ ಸಂಸ್ಥೆಗಳು ಮತ್ತು ರಚನೆಗಳನ್ನು ರಚಿಸುತ್ತದೆ – ಸ್ಪಷ್ಟ ಅಥವಾ ಅಗೋಚರ, ಅವರು ಹೇಳಿದರು.ಆ ಅರ್ಥದಲ್ಲಿ, ಇದು ಒಂದು ಸಮತಲ ಕಾರ್ಯವನ್ನು ನಿರ್ವಹಿಸುತ್ತದೆ – ಅದು ಅಂತರ್-ಸಾಂಸ್ಥಿಕ ಸಂಬಂಧಗಳನ್ನು ನಿಯಂತ್ರಿಸುತ್ತದೆ; ಮತ್ತು ಲಂಬವಾದ ಕಾರ್ಯ – ಇದು ರಾಜ್ಯ ಮತ್ತು ಜನರ ನಡುವಿನ ಸಂಬಂಧವನ್ನು ನಿಯಂತ್ರಿಸುತ್ತದೆ. ಆದರೆ ಇದು ಅಷ್ಟೆ ಅಲ್ಲ.
5
+ ಸಂವಿಧಾನವು ಮಾಡುತ್ತದೆ ಅದಕ್ಕಿಂತ ಹೆಚ್ಚು, ಇದು ನಮ್ಮ ಸಾಮಾಜಿಕ ರಚನೆಯಲ್ಲಿ ಈ ಮೌಲ್ಯಗಳನ್ನು ಭದ್ರಪಡಿಸುತ್ತದೆ, ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು. ಸಾಂವಿಧಾನಿಕ ಸಿದ್ಧಾಂತಿಗಳು ಪ್ರಜಾಪ್ರಭುತ್ವದ ಸ್ಥಿರತೆಯನ್ನು ಅವುಗಳ ಮೂಲ ತತ್ವಗಳ ಸ್ಥಿರತೆಗೆ ಕಾರಣವೆಂದು ಅವರು ಹೇಳಿದರು.
6
+ ಆದಾಗ್ಯೂ, ನಮ್ಮ ಪ್ರಜಾಪ್ರಭುತ್ವದಲ್ಲಿ ನಾವು ಲಘುವಾಗಿ ಪರಿಗಣಿಸುವ ಸಂಗತಿಯೆಂದರೆ, ನಮ್ಮ ಸಂವಿಧಾನವು ನಮ್ಮ ನಾಗರಿಕ ಜೀವನಕ್ಕೆ ಒದಗಿಸುವ ಸ್ಥಿರತೆಯಾಗಿದೆ. ಸಂವಿಧಾನದ ದೀರ್ಘಾಯುಷ್ಯವು ಕಟ್ಟುನಿಟ್ಟಾದ ರೂಢಿಯಾಗಿ ಮಾಡದೆ ಸಂವಿಧಾನದಲ್ಲಿ ಮೂಲಭೂತ ಅಂಶಗಳನ್ನು ಅಳವಡಿಸಲು ಸಾಕಷ್ಟು ಪೂರ್ವಭಾವಿಯಾಗಿದ್ದ ನಮ್ಮ ರಚನೆಕಾರರ ಬುದ್ಧಿವಂತಿಕೆಯನ್ನು ಹೇಳುತ್ತದೆ. , ಮತ್ತು ಹೀಗಾಗಿ ಒಂದು ದುರ್ಬಲ ದಾಖಲೆಅವರು ಹೇಳಿದರು.
7
+ ಸಂವಿಧಾನವು ನಮ್ಮ ಪ್ರಜಾಪ್ರಭುತ್ವಕ್ಕೆ ಗಟ್ಟಿಮುಟ್ಟಾದ ಬುನಾದಿಯಾಗಿದ್ದರೂ ಸಾಕಷ್ಟು ನಮ್ಯತೆಯನ್ನು ಹೊಂದಿದೆ ಎಂದು ಸಿಜೆಐ ಹೇಳಿದರು. ಉದಾಹರಣೆಗೆ, ಲಿಂಗದ ಆಧಾರದ ಮೇಲೆ ತಾರತಮ್ಯವನ್ನು ಕಾನೂನು ನಿಷೇ„ಸುತ್ತದೆ ಎಂದು ಅವರು ಹೇಳಿದರು.ಮಹಿಳಾ ಉದ್ಯೋಗಿಗಳು ಕೆಲವು ಸಂಸ್ಥೆಗಳಲ್ಲಿ ಕೆಲಸ ಮಾಡುವುದನ್ನು ನಿಷೇಧಿಸುವ ಕಾನೂನು, ಅವರ ಭದ್ರತೆಗೆ ಬೆದರಿ��ೆಗಳನ್ನು ಎದುರಿಸುವುದು ಮೇಲ್ನೋಟಕ್ಕೆ ಮಾರಕವಲ್ಲ ಎಂದು ಸಿಜೆಐ ಹೇಳಿದರು.
eesanje/url_46_51_4.txt ADDED
@@ -0,0 +1,6 @@
 
 
 
 
 
 
 
1
+ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್‍ಗಳ ನೇಮಕ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್
2
+ ಬೆಂಗಳೂರು, ಆ.8- ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‍ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
3
+ ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅ„ಕಾರಿಗಳ ಜೊತೆ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಪರ್ಧಾತಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
4
+ ಸಹಾಯಕ ಪ್ರಾಧ್ಯಾಪಕರು ಹಾಗೂ ನರ್ಸ್‍ಗಳ ನೇಮಕಾತಿ ಸಂದರ್ಭದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ನಡುವೆ ವೈಯಕ್ತಿಕ ಸಂಸ್ಥೆಗಳ ಮುಖ್ಯಸ್ಥರು ನೇಮಕಾತಿ ನಡೆಸುತ್ತಿದ್ದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಿಂದ ತೃಪ್ತರಾಗದ ಸಚಿವರು ರಾಜ್ಯಾದ್ಯಂತ 22 ವೈದ್ಯಕೀಯ ಕಾಲೇಜುಗಳು ಮತ್ತು 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುತ್ತಿವೆ. ಈ ಹುದ್ದೆಗಳನ್ನು ನಿಯಮದಂತೆ ಯಾವುದೇ ಮುಲಾಜಿಗೊಳಗಾಗದೇ ಭರ್ತಿ ಮಾಡಬೇಕೆಂದು ತಾಕೀತು ಮಾಡಿದ್ದಾರೆ.
5
+ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಖಾಲಿ ಇರುವ ಹ್ದು?ಗಳಿಗೆ ಪರೀಕ್ಷೆಗಳನ್ನು ನಡೆಸಲು ಕೆಇಎಗೆ ಅಗತ್ಯವಾದ ಸಹಕಾರ ನೀಡಬೇಕು ಜೊತೆಗೆ ಇಲಾಖೆಯ ನೇಮಕಾತಿ ಬೈಲಾಗಳನ್ನು ತಿದ್ದುಪಡಿ ಮಾಡಲಾಗುವುದು ಎಂದು ಹೇಳಿದ್ದಾರೆ. ಕೆಇಎ ಮೂಲಕ ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಸರಕಾರ ಕಳೆದೆರಡು ವರ್ಷಗಳ ಹಿಂದೆಯೇ ಕಳುಹಿಸಿತ್ತು. ಆದಾಗ್ಯೂ, ಸರಿಯಾದ ಸಿ ಅಂಡ್ ಆರ್ ನಿಯಮಗಳು, ರೋಸ್ಟರ್ ಸಿಸ್ಟಮ್ ಇಲ್ಲದಿದ್ದಲ್ಲಿ ಪರೀಕ್ಷೆಯನ್ನು ನಡೆಸುವುದು ಕಷ್ಟ ಎಂದು ಕೆಇಎ ಉತ್ತರಿಸಿದೆ ಎಂಬ ಮಾಹಿತಿಯನ್ನು ಸಭೆಯಲ್ಲಿ ಅ„ಕಾರಿಗಳು ಸಚಿವರ ಗಮನಕ್ಕೆ ತಂದರು.
6
+ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ದಾದಿಯರ ನೇಮಕಾತಿಗೆ ಅನ್ವಯವಾಗುವ ಸಿ ಮತ್ತು ಆರ್ ನಿಯಮಗಳನ್ನು ಅನುಸರಿಸುವಂತೆ ಸಚಿವರು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಜಂಟಿ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.ನೇಮಕಾತಿ ನಿಲುವಳಿಯನ್ನು ಕೆಇಎಗೆ ಹಸ್ತಾಂತರಿಸುವ ಸುಗಮ ಪ್ರಕ್ರಿಯೆಗಾಗಿ, ಪರೀಕ್ಷೆಗಳನ್ನು ನಡೆಸಲು ಕೆಇಎಗೆ ಪಠ್ಯಕ್ರಮಕ್ಕಾಗಿ ತಜ್ಞರ ಸಮಿತಿಯನ್ನು ರಚಿಸುವಂತೆ ಸಚಿವರು ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಅವರಿಗೆ ಸೂಚಿಸಿದ್ದಾರೆ.
eesanje/url_46_51_5.txt ADDED
@@ -0,0 +1,8 @@
 
 
 
 
 
 
 
 
 
1
+ ಉಮಾಶ್ರೀಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ
2
+ ಬೆಂಗಳೂರು,ಆ.8- ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಸೇರಿದಂತೆ ಮೂವರಿಗೆ ನೀಡಲಾಗುತ್ತಿದೆ. ಅಲ್ಲದೆ 75 ವಾರ್ಷಿಕ ಪ್ರಶಸ್ತಿಗಳು ಮತ್ತು 15 ದತ್ತಿನಿಧಿ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಕೆ.ವಿ ನಾಗರಾಜ ಮೂರ್ತಿ ತಿಳಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ವೃತ್ತಿರಂಗಭೂಮಿಯ 30ಕ್ಕೂ ಹೆಚ್ಚು ಕಲಾವಿದರನ್ನು ವಾರ್ಷಿಕ ಪ್ರಶಸ್ತಿ ಮತ್ತು ದತ್ತಿನಿ„ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದರು. 2022, 2023 ಮತ್ತು 2024ನೇ ಸಾಲಿನ ಅಕಾಡೆಮಿಯ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ, ದತ್ತಿನಿ„ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಶಸ್ತಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
4
+ ಕರ್ನಾಟಕ ನಾಟಕ ಅಕಾಡೆಮಿ ಪುನರ್ ರಚನೆಯಾಗಿದ್ದು, 2024-25ನೇ ಸಾಲಿಗೆ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿದೆ. ಭಾರತೀಯ ರಂಗಭೂಮಿಯಲ್ಲಿಯೇ ಅತ್ಯಂತ ಕ್ರಿಯಾಶೀಲವಾಗಿರುವ ಕನ್ನಡ ರಂಗಭೂಮಿ ಕಳೆದ 5 ದಶಕಗಳಲ್ಲಿ ಸಾ„ಸಿರುವ ಯಶಸ್ಸು ಅತ್ಯಂತ ಮಹತ್ತರವಾದುದು. ಈಗಾಗಲೇ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ತನ್ನದೇ ಆದ ಮಹತ್ತರವಾದ ಕೊಡುಗೆಗಳ ಮೂಲಕ ಶ್ರೀಮಂತವಾಗಿರುವ ರಂಗಭೂಮಿಗೆ ಕೊಡುಗೆ ಕೊಟ್ಟವರನ್ನು ಗುರುತಿಸಿ, ಕರ್ನಾಟಕ ಸರ್ಕಾರ ನಾಟಕ ಅಕಾಡೆಮಿಯ ಮೂಲಕ ಪ್ರತಿವರ್ಷ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿದೆ ಎಂದರು.
5
+ ಈ ನಿಟ್ಟಿನಲ್ಲಿ ಪ್ರಸ್ತುತ 2022-23, 2023-24 ಮತ್ತು 2024-25ನೇ ಸಾಲಿನ ಪ್ರಶಸ್ತಿಗಳನ್ನು ನೀಡಬೇಕಾಗಿದ್ದು, ಆ.3ರಂದು ನಡೆದ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಕಲಾವಿದರನ್ನು ಮತ್ತು ನಾಟಕಕಾರರನ್ನು ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದೆ. ವರ್ಷದ ಪ್ರಶಸ್ತಿಗಳನ್ನು ಬಹುತೇಕ ಎಲ್ಲಾ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗಿದ್ದು, ಸಾಮಾಜಿಕ ನ್ಯಾಯ ಮತ್ತು ಜಿಲ್ಲಾವಾರುಗಳಿಗೆ ಅನ್ವಯವಾಗುವಂತೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ವಿಶೇಷವಾಗಿ ಈ ಸಾಲಿನಲ್ಲಿ ಯುವಪ್ರಶಸ್ತಿ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರಶಸ್ತಿಗೆ ಆಯ್ಕೆ ಮಾಡುತ್ತಿರುವುದು ವಿಶೇಷವಾಗಿದೆ ಎಂದು ಹೇಳಿದರು.
6
+ ಈ ಮೂರು ವರ್ಷಗಳಿಗೆ 3 ಕಲಾವಿದರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, 2022ನೇ ಸಾಲಿಗೆ ಪ್ರಖ್ಯಾತ ನಟಿ ಉಮಾಶ್ರೀ, 2023ನೇ ಸಾಲಿಗೆ ನಾಟಕಕಾರ ಹೆಚ್.ಎಸ್.ಶಿವಪ್ರಕಾಶ್ ಹಾಗೂ 2024ನೇ ಸಾಲಿಗೆ ಪ್ರಸಿದ್ಧ ರಂಗಸಂಘಟಕ, ನಾಟಕಕಾರ ಮತ್ತು ಕೋಲಾರದ ಆದಿಮ ಸಾಂಸ್ಕೃತಿಕ ಪ್ರತಿಷ್ಠಾನದ ರೂವಾರಿ ಕೆ.ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
7
+ ಹಾಗೆಯೇ ವಾರ್ಷಿಕ ಪ್ರಶಸ್ತಿಗಳಲ್ಲಿಯೂ ನಾಡಿನ ವಿವಿಧ ಜಿಲ್ಲೆಗಳ ಅತ್ಯುತ್ತಮ ಕಲಾವಿದರ ಜೊತೆಗೆ ಈಗಾಗಲ��� ಸಾಂಸ್ಕೃತಿಕ ಕ್ಷೇತ್ರದಲ್ಲಿ ಹೆಸರು ಮಾಡಿರುವ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಪ್ರಕಾಶ್ ರೈ, ಬಿ.ಸುರೇಶ್, ಅಚ್ಯುತ ಕುಮಾರ್, ರಮೇಶ್ ಪಂಡಿತ್ ಮತ್ತು ಮಕ್ಕಳ ರಂಗಭೂಮಿಯ ನಾಟಕಕಾರರಾದ ಡಾ. ಲಕ್ಷ್ಮಿಪರಿ ಕೋಲಾರ ಮುಂತಾದವರು ವಾರ್ಷಿಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಎಂದರು. ರಘುನಂದನ್, ರಾಜಗುರು ಹೊಸಕೋಟಿ. ಯುವ ಪ್ರಶಸ್ತಿಗೆ ಡಾಲೇಟೂರ, ರಂಗಭೂಮಿಯ ಪ್ರಸಿದ್ಧ ಸಂಘಟಕ ಹಾಗೂ ರಂಗಸ್ವಾಮಿ ಜಿ. ಅವರನ್ನು ಆಯ್ಕೆ ಮಾಡಲಾಗಿದೆ.
8
+ ಹೊರನಾಡ ಕಲಾವಿದರಲ್ಲಿ ಮುಂಬೈನ ಪ್ರಸಿದ್ಧ ರಂಗನಿರ್ದೇಶಕಿ ಕನ್ನಡತಿ ನಂದಿತಾ ಯಾದವ್ ಮತ್ತು ಪಾಂಡಿಚೇರಿ ವಿಶ್ವವಿದ್ಯಾನಿಲಯದ ರಂಗತಜ್ಞೆ ಪ್ರಾಧ್ಯಾಪಕಿ ಡಾ. ಪವಿತ್ರಾ ಅವರನ್ನು ಆಯ್ಕೆ ಮಾಡಿರುವುದಾಗಿ ಅವರು ತಿಳಿಸಿದರು.
eesanje/url_46_51_6.txt ADDED
@@ -0,0 +1,3 @@
 
 
 
 
1
+ ಪ್ರಜ್ವಲ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿಕೆ
2
+ ಬೆಂಗಳೂರು,ಆ.8- ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರವನ್ನು ಹೈಕೋರ್ಟ್ ಆ.29 ಕ್ಕೆ ಮುಂದೂಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್‍ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆಕ್ಷೇಪಣೆ ಸಲ್ಲಿಸಲು ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
3
+ ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ಪರ ವಕೀಲರು ವಾದ ಮಂಡಿಸಿ ಮಹಿಳೆಗೆ ಕಿರುಕುಳವಾಗಿದೆ ಎಂದು ಆಕೆಯ ಹೇಳಿಕೆಯನ್ನು ಉಲ್ಲೇಖಿಸಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ವಿಚಾರಣೆಯನ್ನು ಆ.29 ಕ್ಕೆ ಮುಂದೂಡಿದೆ.
eesanje/url_46_51_7.txt ADDED
@@ -0,0 +1,7 @@
 
 
 
 
 
 
 
 
1
+ ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಡಿದಾಟ : ನವಜೋಡಿ ಸಾವು..
2
+ ಕೆಜಿಎಫ್, ಆ.8- ಸಪ್ತಪದಿ ತುಳಿದ ಕೆಲವೇ ಗಂಟೆಗಳಲ್ಲಿ ನವಜೋಡಿ ಮಾರಕಾಸಗಳಿಂದ ಹೊಡೆದಾಡಿಕೊಂಡು ಇಬ್ಬರೂ ಮೃತಪಟ್ಟಿರುವ ಘಟನೆಯೊಂದು ಅಂಡರ್‍ಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪರಸ್ಪರ ಎರಡೂ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ಈ ಜೋಡಿ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ದುರಂತ ಅಂತ್ಯ ಕಂಡಿರುವುದು ಗ್ರಾಮವನ್ನು ಬೆಚ್ಚಿ ಬೀಳಿಸಿದೆ.ಆಂಧ್ರದ ರಾಯಸಂದ್ರದಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ, ಆಂಧ್ರಪ್ರದೇಶದ ಶಾಂತಿಪುರಂ ನಿವಾಸಿ ನವೀನ್ ಕುಮಾರ್(30) ಹಾಗೂ ಕೆಜಿಎಫ್ ನ ಬೈನೇಹಳ್ಳಿಯ ನಿವಾಸಿ ನಿಖಿತಾಶ್ರೀ(18) ಹೊಡೆದಾಡಿಕೊಂಡು ಮೃತಪಟ್ಟವರು.
3
+ ನಿಖಿತಾಶ್ರೀ ಮನೆಯಲ್ಲಿ ಆಕೆಗೆ ಮದುವೆ ಮಾಡಲು ಪೋಷಕರು ಬ್ರೋಕರ್‍ಗೆ ಹುಡುಗನನ್ನು ತೋರಿಸಲು ಹೇಳಿದ್ದರು. ಅದರಂತೆ ಬ್ರೋಕರ್ ಮೂರು ತಿಂಗಳ ಹಿಂದೆ ನವೀನ್ ಕುಮಾರ್‍ನನ್ನು ಪರಿಚಯಿಸಿ ಮನೆಗೆ ಕರೆಸಿಕೊಂಡು ಮದುವೆ ಮಾತುಕತೆ ನಡೆಸಿದ್ದರು. ಆ ಸಂದರ್ಭದಲ್ಲಿ ನವೀನ್ ಏನನ್ನು ಮಾತನಾಡದೇ ಮೌನವಾಗಿದ್ದ. ಆತನ ಮನೆಯವರಿಂದಲೂ ಮದುವೆಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹಾಗಾಗಿ ಒಂದೂವರೆ ತಿಂಗಳ ಹಿಂದೆ ಈ ಮದುವೆ ಬೇಡ ಎಂದಿದ್ದರು.
4
+ ನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ನಿಖಿತಾಶ್ರೀ ಜೊತೆ ಮಾತನಾಡುವ ಸಲುವಾಗಿ ನವೀನ್ ಕುಮಾರ್‍ ಕಾಲೇಜು ಬಳಿ ಹೋಗಿ ಆಕೆಗೆ ಮೊಬೈಲ್ ಕೊಡಿಸಿದ್ದಾನೆ. ಅಂದಿನಿಂದ ಇವರಿಬ್ಬರು ಮೊಬೈಲ್‍ನಲ್ಲಿ ಮಾತುಕತೆ ನಡೆಸುತ್ತಿದ್ದರು.ಹುಡುಗನ ಮನೆಯವರು ಏಕಾಏಕಿ ಮೂರು ದಿನಗಳ ಹಿಂದೆ ನಿಖಿತಾಶ್ರೀ ಮನೆಗೆ ಮದುವೆ ಮಾತುಕತೆ ನಡೆಸಿ ಸರಳವಾಗಿ ಚಂಬರಸನಹಳ್ಳಿಯ ನವೀನ್ ಕುಮಾರನ ಅಕ್ಕನ ಮನೆಯಲ್ಲಿ ಮದುವೆ ಮಾಡೋಣ ಎಂದು ನಿನ್ನೆಗೆ ದಿನಾಂಕ ಗೊತ್ತು ಮಾಡಿದ್ದರು.
5
+ ಅದರಂತೆ ನಿನ್ನೆ ಬೆಳಗ್ಗೆ ನಿಖಿತಾಶ್ರೀ ಹಾಗೂ ನವೀನ್ ಕುಮಾರ್ ಮದುವೆ ನೆರವೇರಿದೆ. ನಂತರ ಗ್ರಾಮದಲ್ಲಿರುವ ವರನ ದೊಡ್ಡಪ್ಪನ ಮನೆಗೆ ವಧು-ವರನನ್ನು ಕರೆದುಕೊಂಡು ಹೋಗಿದ್ದಾರೆ. ಆ ಸಂದರ್ಭದಲ್ಲಿ ವಧು-ವರರಿಬ್ಬರೂ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡು ಯಾವುದೋ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಆ ವೇಳೆ ನವೀನ್ ಕುಮಾರ್ ಕೈಗೆ ಸಿಕ್ಕಿದ ಮಚ್ಚಿನಿಂದ ನಿಖಿತಾಶ್ರೀ ಮನಬಂದಂತೆ ಹಲ್ಲೆ ನಡೆಸಿ ನಂತರ ಆತನು ಮಚ್ಚಿನಿಂದ ಹೊಡೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.
6
+ ಕೊಠಡಿಯಲ್ಲಿ ಜೋರಾಗಿ ಕೂಗಾಟ ಕೇಳಿಸಿಕೊಂಡು ಸಂಬಂ„ಕರು ಬಾಗಿಲು ಹೊಡೆದು ನೋಡುವಷ್ಟರಲ್ಲಿ ನಿಖಿತಾಶ್ರೀ ರಕ್ತದ ಮಡುವಿನಲ್ಲಿ ಬಿದ್ದಿರುವುದು ಗಮನಿಸಿ ಆಕೆಯನ್ನು ಹಾಗೂ ಗಂಭೀರ ಗಾಯಗೊಂಡಿದ್ದ ನವೀನ್ ಕುಮಾರ್‍ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೇ ನಿಖಿತಾಶ್ರೀ ಮೃತಪಟ್ಟಿದ್ದಾಳೆ. ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನವೀನ್ ಕುಮಾರ್ ಇಂದು ಬೆಳಗ್ಗೆ ಎಸ್‍ಎನ್‍ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
7
+ ನವಜೋಡಿ ಮನೆಯ ಕೊಠಡಿಗೆ ಹೋದ ಕೆಲ ಹೊತ್ತಿನಲ್ಲೇ ಯಾವ ವಿಚಾರಕ್ಕಾಗಿ ಜಗಳ ಮಾಡಿಕೊಂಡರು ಎಂಬುವುದು ನಿಗೂಢವಾಗಿದೆ. ಸ್ಥಳಕ್ಕೆ ಅಂಡರ್‍ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.ವಧು-ವರರಿಬ್ಬರು ಸಂತೋಷವಾಗಿದ್ದರು. ನಾವು ಮದುವೆಗೆ ಹೋಗಿದ್ದೆವು. ಅವರು ಹೊಡೆದಾಡಿಕೊಂಡಿರುವುದು ಸುಳ್ಳು. ಇಬ್ಬರನ್ನು ಯಾರೋ ಹೊಡೆದಿರುವ ಅನುಮಾನ ಇದೆ ಎಂದು ನಿಖಿತಾಶ್ರೀ ಅವರ ತಂಗಿ ಅರ್ಚನಾ ಹಾಗೂ ತಾತ ವೆಂಕಟರಮಣಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.
eesanje/url_46_51_8.txt ADDED
@@ -0,0 +1,7 @@
 
 
 
 
 
 
 
 
1
+ ವೃದ್ಧೆಯರನ್ನು ಟಾರ್ಗೆಟ್ ಮಾಡಿ ಒಡವೆ ಕಸಿಯುತ್ತಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ
2
+ ಕೊರಟಗೆರೆ,ಆ.8- ವೃದ್ಧಾಪ್ಯ ಮಾಸಾಶನ ಹೆಸರಿನಲ್ಲಿ ವೃದ್ಧೆಯರನ್ನು ಟಾರ್ಗೆಟ್ ಮಾಡಿ, ಯಾಮಾರಿಸಿ ಆಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಕೊರಟಗೆರೆ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರುಘಟ್ಟ ಹೋಬಳಿಯ ಹುರಳಿಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜೇಶ್ ಅಲಿಯಾಸ್ ಹೊಟ್ಟೆ ಮಂಜ (40) ಬಂಧಿತ ಆರೋಪಿ.
3
+ ಡಿಸಿಸಿ ಬ್ಯಾಂಕ್ ಬಳಿ ವೃದ್ಧೆಯೊಬ್ಬರಿಗೆ ಡ್ರಾಪ್ ನೀಡುವ ನೆಪದಲ್ಲಿ ಬಂದು ಆಕೆಯ ಕೊರಳಲ್ಲಿ ಚಿನ್ನದ ಸರವನ್ನು ನೋಡಿ ಕೊರಳಲ್ಲಿ ಚಿನ್ನದ ಸರ ಇದ್ದರೆ ವೃದ್ಧಾಪ್ಯ ವೇತನ ಸ್ಥಗಿತಗೊಳ್ಳಲಿದೆ ಎಂದು ನಂಬಿಸಿ ಹೆಂಗಸರುಗಳಿಂದ ಚಿನ್ನಾಭರಣ ಬಿಚ್ಚಿಸಿಕೊಳ್ಳುತ್ತಿದ್ದ ಖತರ್ನಾಕ್ ಕಳ್ಳ ಅರ್ಜಿ ತರುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ.
4
+ ಈತನನ್ನು ಬೆನ್ನತ್ತಿದ ಕೊರಟಗೆರೆ ಪೊಲೀಸ್ ತಂಡ ಸಿಸಿ ಕ್ಯಾಮೆರಾ ಪುಟೇಜ್‍ಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ಮುಂಭಾಗ ಟ್ರಾಫಿಕ್‍ನಲ್ಲಿ ರಸ್ತೆಯಲ್ಲಿಯೇ ಹಿಡಿಯುವಾಗ ದೊಡ್ಡ ಹೈಡ್ರಾಮ ನಡೆದು ಆರೋಪಿ ಮಂಜ ಪೊಲೀಸರ ಮೇಲೆಯೇ ಬೈಕ್ ಹತ್ತಿಸಲು ಮುಂದಾಗಿ ನಂತರ ಟ್ರಾಫಿಕ್ ಪೊಲೀಸರ ಸಹಕಾರದಲ್ಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
5
+ ಪೋಸ್ಟ್ ಆಫೀಸ್ ಹಾಗೂ ಕೆಲವು ಬ್ಯಾಂಕುಗಳ ಮುಂದೆ ವೃದ್ಧಾಪ್ಯ ವೇತನಕ್ಕೆ ಬರುವ ವೃದ್ಧೆಯರನ್ನು ಟಾರ್ಗೆಟ್ ಮಾಡಿಕೊಂಡು ಮಂಜುನಾಥ್ ಹಣ ಬಿಡಿಸಿಕೊಡುವ ನೆಪದಲ್ಲಿ ಮಹಿಳೆಯರ ಜೊತೆ ಸೇರಿ ಸಲಿಗೆ ಬೆಳೆಸಿ ಹಳೆ ಪರಿಚಯದರಂತೆ ವರ್ತಿಸಿ ಹಣ ಬಿಡಿಸಿಕೊಡುವುದಾಗಿ ಸ್ಲಿಪ್ ಬರೆದುಕೊಂಡು ನೀವು ಕೊರಳಿಗೆ ಬಂಗಾರದ ಸರಗಳನ್ನು ಹಾಕಿಕೊಂಡು ಹೋದರೆ ವೃದ್ಧಾಪ್ಯ ವೇತನ ನಿಲ್ಲಿಸುತ್ತಾರೆ ಎಂದು ವೃದ್ದೆಯರ ಬಳಿ ಚಿನ್ನದ ಸರಗಳನ್ನು ಬಿಚ್ಚಿಸಿಕೊಂಡು ಸಿನಿಮೀಯ ರೀತಿಯಲ್ಲಿ ಕ್ಷಣಾರ್ಧದಲ್ಲಿ ಮರೆಯಾಗುತ್ತಿದ್ದ ಎನ್ನಲಾಗಿದೆ.
6
+ ಆರೋಪಿಯ ವಿರುದ್ಧ ಕೊರಟಗೆರೆ, ಮಧುಗಿರಿ, ಹೆಬ್ಬೂರು, ಕೋಳಾಲ ಠಾಣೆಗಳಲ್ಲಿ 7 ಪ್ರಕರಣ ದಾಖಲಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ನಗರದಲ್ಲಿ ವಂಚನೆ ಮಾಡಿದ್ದ ಈತನ ವಿರುದ್ಧ 32 ಪ್ರಕರಣಗಳಿವೆ.ಈ ಕಾರ್ಯಾಚರಣೆಯಲ್ಲಿ ಕೊರಟಗೆರೆ ಸಿಪಿಐ ಅನಿಲï, ಪಿಎಸ್‍ಐ ಚೇತನ್ ಗೌಡ ಮಾರ್ಗದರ್ಶನದಂತೆ ಕೊರಟಗೆರೆ ಪೊಲೀಸ್ ಸಿಬ್ಬಂದಿಗಳಾದ ದೊಡ್ಡಲಿಂಗಯ್ಯ ಹಾಗೂ ಮೋಹನ್ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 10 ಸಾವಿರ ನಗದು, 6.75 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
7
+ ಇವರ ಕಾರ್ಯಾಚರಣೆಗೆ ಜಿಲ್ಲೆ ಪೊಲೀಸ್ ವರಿಷ್ಠಾvಕಾರಿ ಅಶೋಕ್ ಅಡಿಷನಲ್ ಎಸ್‍ಪಿ ಮರಿಯಪ್ಪ ಹಾಗೂ ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
eesanje/url_46_51_9.txt ADDED
@@ -0,0 +1,5 @@
 
 
 
 
 
 
1
+ ಬಳ್ಳಾರಿ: ನಿಧಿ ಆಸೆಗಾಗಿ ಗುಹೆಯೊಳಗೆ ಸುರಂಗ ಕೊರೆಯುತ್ತಿದ್ದ ಐವರ ಬಂಧನ
2
+ ಬಳ್ಳಾರಿ,ಆ.8- ನಿಧಿ ಆಸೆಗಾಗಿ ಬೆಟ್ಟದ ಮೇಲಿನ ಗುಹೆಯೊಳಗೆ ಸುರಂಗ ಕೊರೆಯಲು ಮುಂದಾಗಿದ್ದ 11 ಮಂದಿ ಕಳ್ಳರ ಪೈಕಿ ಐವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಆಂಧ್ರಮೂಲದ ಶ್ರೀನಿವಾಸ್ (45), ಆಕಾಶ್ ( 20), ಶ್ರೀನಿವಾಸ್, ವೆಂಕಟ್ ರಾವ್ ಹಾಗೂ ಗದಗ ಮೂಲದ ಭಗತ್ ಸಿಂಗ್ ದೊಡ್ಡಮನಿ (50) ಎಂಬುವರನ್ನು ಬಂಧಿಸಲಾಗಿದೆ. ಸಂಡೂರು ತಾಲೂಕಿನ ತಾರಾನಗರದ ನಾರಿಹಳ್ಳದ ಹಿಂಭಾಗದ ಗುಡ್ಡದಲ್ಲಿ ಈ ಖದೀಮರು ಸುರಂಗ ಕೊರೆಯಲು ಸಿದ್ದತೆ ಮಾಡಿಕೊಂಡಿದ್ದರು.
3
+ ನಿಧಿಗಾಗಿ 40 ಮೀಟರ್ ಆಳದ ಗುಹೆಯೊಳಗೆ ಇಳಿದಿದ್ದರು.ಗುಹೆಯೊಳಗೆ ಸುರಂಗ ಕೊರೆಯಲು ಕೃತಕ ಆಕ್ಸಿಜನ್ ವ್ಯವಸ್ಥೆ, ಲೈಟಿಂಗ್‍ಗಾಗಿ ಜನರೇಟರ್ ವ್ಯವಸ್ಥೆ ಮಾಡಿಕೊಂಡಿದ್ದರು. ನಿಧಿಗಾಗಿ ಎಲ್ಲ ಸಿದ್ಧತೆ ಮಾಡಿಕೊಂಡು ನೀರು ತರಲೆಂದು ಖದೀಮರು ನಾರಿಹಳ್ಳಕ್ಕೆ ಹೋಗಿದ್ದಾಗ, ಅದೇ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗಳು ತಡೆದು ವಿಚಾರಿಸಿದ್ದಾರೆ. ಕಳ್ಳರು ತಬ್ಬಿಬ್ಬಾಗಿ ಉತ್ತರ ನೀಡಲು ತಡವರಿಸಿದ್ದರಿಂದ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ನಿಧಿಗಾಗಿ ಬಂದಿರುವುದಾಗಿ ತಿಳಿಸಿದ್ದಾರೆ.
4
+ ಕಳ್ಳರು ನೀಡಿದ ಮಾಹಿತಿಯಂತೆ ಅರಣ್ಯಾಧಿಕಾರಿಗಳು ಗುಹೆಯ ಬಳಿ ಹೋಗಿ ನೋಡಿದಾಗ ಅಲ್ಲಿ ಸುರಂಗ ಕೊರೆಯಲು ವ್ಯವಸ್ಥೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಅರಣ್ಯಾ„ಕಾರಿಗಳು ಬರುತ್ತಿದ್ದಂತೆ ಆರು ಮಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅತ್ಯಾಧುನಿಕ ಟೆಕ್ನಾಲಜಿ ಬಳಸಿ ನಿಧಿ ಶೋಧನೆಗೆ ಅರಣ್ಯದಲ್ಲಿರುವ ಗುಹೆಗಳನ್ನು ಈ ಖದೀಮರು ಟಾರ್ಗೆಟ್ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
5
+ ಇದಕ್ಕೆ ತಾರಾನಗರದ ಒಬ್ಬ ಹಾಗೂ ಹೊಸಪೇಟೆ ಇನ್ನೊಬ್ಬ ಕುಮ್ಮಕ್ಕು ನೀಡಿದ್ದಾನೆ. ಅರಣ್ಯಾಧಿಕಾರಿಗಳು ಬರುತ್ತಿದ್ದಂತೆ ಆರು ಮಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಐವರನ್ನು ಬಂ„ಸಿ ಅರಣ್ಯಾ„ಕಾರಿಗಳು ಕಾಡು ಪ್ರಾಣಿಗಳ ಹತ್ಯೆ ಕಾಯ್ದೆಯಡಿ ತನಿಖೆ ಕೈಗೊಂಡಿದ್ದಾರೆ.
eesanje/url_46_52_1.txt ADDED
@@ -0,0 +1,5 @@
 
 
 
 
 
 
1
+ ಶಾಸಕ ಗೋಪಾಲಕೃಷ್ಣ ಬೇಳೂರು ಬಂಧನಕ್ಕೆ ಸಿ.ಟಿ.ರವಿ ಒತ್ತಾಯ
2
+ ಬೆಂಗಳೂರು,ಆ.7-ಹಣಕ್ಕೆ ಬೇಡಿಕೆಯಿಟ್ಟು ಸಹಾಯಕ ಇಂಜಿನಿಯರ್‌ಗೆ ಜೀವ ಬೆದರಿಕೆ ಹಾಕಿರುವ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಕೂಡಲೇ ಬಂಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಬೇಕೆಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
3
+ ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಧಿಕಾರಿಗಳ ಹಣಕ್ಕಾಗಿ ಕಿರುಕುಳ ನೀಡುವುದೇ ಕರ್ನಾಟಕ ಕಾಂಗ್ರೆಸ್‌‍ ನೇತೃತ್ವದ ಸರ್ಕಾರದ ಒನ್‌ಲೈನ್‌ ಅಜೆಂಡಾ ಎಂದು ಗಂಭೀರ ಆರೋಪ ಮಾಡಿದ್ದಾರೆ.
4
+ ಶಾಸಕರ ಮಾತು ಕೇಳಿ ಪುಡಿರೌಡಿಯಂತೆ ವರ್ತಿಸಿ ಸಹಾಯಕ ಎಂಜಿಯರ್‌ಗೆ ಸುಪಾರಿ ಪಡೆದು ಕಿರುಕುಳ ನೀಡುತ್ತಿರುವ ಡಿವೈಎಸ್ಪಿ ಅವರನ್ನು ಕೂಡ ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
5
+ ಸಹಾಯಕ ಎಂಜಿನಿಯರ್‌ ಒಬ್ಬರು ತಮಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಂದ ಜೀವಬೆದರಿಕೆಯಿದೆ, ದಯವಿಟ್ಟು ನನ್ನನ್ನು ಕಾಪಾಡಿ ಎಂದು ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಅಂಗಲಾಚುತ್ತಿರುವುದು ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟಾಚಾರ ಮತ್ತು ಅರಾಜಕತೆ ವ್ಯಾಪ್ತಿ ಎಷ್ಟರ ಮಟ್ಟಿಗಿದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ.
eesanje/url_46_52_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರಾಜ್ಯದಲ್ಲಿ ಮಳೆಯಿಂದ 61,700 ಹೆಕ್ಟೇರ್‌ ಬೆಳೆ ಹಾನಿ
2
+ ಚಿಕ್ಕಮಗಳೂರು, ಆ.6– ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ 61,700 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿದರು. ಬಾಬಾಬುಡನ್‌ ಗಿರಿಯ ಕವಿಕಲ್‌ಗಂಡಿಯಲ್ಲಿ ಭಾರಿ ಮಳೆಯಿಂದ ರಸ್ತೆ ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
3
+ ಇದುವರೆವಿಗೂ ಉತ್ತರ ಕರ್ನಾಟಕ ಹಾಗೂ ರಾಜ್ಯದ ಅಲ್ಲಲ್ಲಿ ಬೆಳೆ ಹಾನಿಯಾಗಿರುವ ವರದಿ ಬಂದಿದ್ದು, ಮಲೆನಾಡು ಪ್ರದೇಶದಲ್ಲಿ ಬೆಳೆ ಹಾನಿ ಜೊತೆಗೆ ಗುಡ್ಡ ಕುಸಿತ ಉಂಟಾಗಿದೆ. ಹಾನಿಗೆ ಸಂಬಂಧಿಸಿದಂತೆ ತಕ್ಷಣ ಪರಿಹಾರ ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ. ಇನ್ನೂ ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದ್ದು, ಹಾನಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು.
4
+ 2019 ನೇ ಹಾಗೂ 2022 ನೇ ಸಾಲಿನಲ್ಲಿ 12 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಆ ಸಂದರ್ಭದಲ್ಲಿ 250 ಜನರ ಪ್ರಾಣ ಹಾನಿಯಾಗಿದೆ, ಈ ವರ್ಷ 58 ಜನ ಇಲ್ಲಿಯವರೆಗೂ ಪ್ರವಾಹದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ. ದೊಡ್ಡ ಪ್ರವಾಹ ಕಂಡು ಬಂದಿಲ್ಲ. ಕೆಲವು ಸೀಮಿತ ಪ್ರದೇಶಗಳಲ್ಲಿ ಹಾನಿಯಾಗಿದೆ ಎಂದರು.
5
+ ಅಧಿವೇಶನ ಮುಗಿದ ತಕ್ಷಣ ಮುಖ್ಯಮಂತ್ರಿಗಳು, ನಾನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹದಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಿ ಜನರಿಗೆ ಆಗಿರುವ ಸಮಸ್ಯೆಗೆ ನೆರವು ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
6
+ ಮಲೆನಾಡು ಬಹುಕಾಲದಿಂದ ಹೆಚ್ಚು ಮಳೆ ಕಂಡಿರುವ ಪ್ರದೇಶವಾಗಿದೆ. ಸ್ವಾಭಾವಿಕವಾಗಿ ಮಳೆ ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಹವಾಮಾನ ಬದಲಾವಣೆಯಿಂದಾಗಿ ಜೂನ್‌ ತಿಂಗಳಿನಿಂದ ಜುಲೈ 10ರ ವರೆಗೆ ಮಳೆ ಕೊರತೆ ಕಾಣುತ್ತೇವೆ. ಜುಲೈ 10 ರ ನಂತರ ಎರಡು ತಿಂಗಳಿಗಾಗುವಷ್ಟು ಮಳೆ 20 ದಿನದಲ್ಲಿ ಸುರಿದಿದೆ.
7
+ ಹವಾಮಾನ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ. ಪರಿಸರದ ವಿಷಯದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕು. ಇಷ್ಟ ಬಂದ ಹಾಗೇ ಗುಡ್ಡ ಕಡಿದು ರಸ್ತೆ ನಿರ್ಮಾಣ ಮಾಡುವುದರಿಂದ ಗುಡ್ಡ ಕುಸಿತದಂತಹ ಅವಘಡಗಳನ್ನು ಕಾಣುತ್ತಿದ್ದೇವೆ ಎಂದು ತಿಳಿಸಿದರು.
8
+ ಗುಡ್ಡ ಕುಸಿತದಂತಹ ಸಮಸ್ಯೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರದ ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾದಿಂದ ರಾಜ್ಯದಲ್ಲಿ ಗುಡ್ಡ ಕುಸಿತ ಸಾಧ್ಯತೆ ಹೆಚ್ಚು ಇರುವ ಕಡೆ ಈಗಾಗಲೇ ವೈಜ್ಞಾನಿಕ ಸರ್ವೆ ಮಾಡಿಸಿದ್ದು, ಅದರ ವರದಿ ಆಧಾರದ ಮೇಲೆ ಮಲೆನಾಡು ಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಳುಹಿಸಿದೆ.
9
+ ಆ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಯಾವ ಜನವಸತಿ ಪ್ರದೇಶಗಳಲ್ಲಿ ಗುಡ್ಡ ಕುಸಿತದಿಂದ ತೊಂದರೆಯಾಗುವು��ನ್ನು ಗುರುತಿಸಿ ವರದಿ ಕೊಡಲು ತಿಳಿಸಿದ್ದು, ಇನ್ನು 10-15 ದಿನಗಳಲ್ಲಿ ವರದಿ ತರಿಸಿಕೊಂಡು ಈ ವರ್ಷ 100 ಕೋಟಿ, ಮುಂದಿನ ವರ್ಷ 200 ಕೋಟಿ ಸೇರಿದಂತೆ ಒಟ್ಟು 300 ಕೋಟಿ ಮೊತ್ತದ ಗುಡ್ಡ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲು ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳು ಒಪ್ಪಿದ್ದು , ಈ ಅನುದಾನದಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ಅಕ್ಕಪಕ್ಕದ ಕರಾವಳಿ ಜಿಲ್ಲೆಗಳ ಗುಡ್ಡ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.
10
+ ಅತಿವೃಷ್ಟಿಯಿಂದ ಹಾನಿಯಾಗಿರುವ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಶೀಘ್ರವಾಗಿ ಕೈಗೊಳ್ಳಲು ತಿಳಿಸಲಾಗಿದೆ. ಗುಡ್ಡ ಕುಸಿತದಿಂದ ಹಾನಿಯಾಗಿರುವ ರಸ್ತೆಗಳ ದುರಸ್ತಿ ಸಾಧ್ಯವಿಲ್ಲ. ಅವುಗಳ ಮರು ನಿರ್ಮಾಣವಾಗಬೇಕಾಗಿದೆ. ಇಂಥ ರಸ್ತೆಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
11
+ ಶಾಸಕ ಹೆಚ್‌.ಡಿ. ತಮಯ್ಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್‌. ಹರೀಶ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್‌, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ, ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್‌.ಎಸ್‌‍. ಕೀರ್ತನಾ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
eesanje/url_46_52_11.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ವಿಧವೆಯರಿಗೆ ಗನ್ ತೋರಿಸಿ ನಿವೇಶನ ಕಬ್ಜ ಮಾಡಿದ ಡಿಕೆಶಿ : ಹೆಚ್ಡಿಕೆ ನೇರ ಆರೋಪ
2
+ ರಾಮನಗರ/ಚನ್ನಪಟ್ಟಣ:ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನ ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕಂಡ ಕಂಡವರ ಆಸ್ತಿಗಳನ್ನು ಸರಣಿಯಾಗಿ ಕಬ್ಜಾ ಮಾಡುತ್ತಿರುವ ವ್ಯಕ್ತಿಯೊಬ್ಬ ನನ್ನ ಆಸ್ತಿ, ನನ್ನ ತಂದೆಯವರ ಆಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಮಾಡುತ್ತಿರುವ ಅನಾಚಾರ, ಅಕ್ರಮಗಳ ಬಗ್ಗೆ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಸವಾಲು ಹಾಕಿದರು.
3
+ ಸದಾಶಿವನಗರದಲ್ಲಿ ಐವರು ವಿಧವಾ ತಾಯಂದಿರ ಬಳಿ ನಿವೇಶನಗಳ ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳುತ್ತಾರೆ. ಆ ನಿವೇಶನಕ್ಕೆ ಸಂಪೂರ್ಣವಾಗಿ ಹಣ ಕೊಟ್ಟಿಲ್ಲ. ಕಾಂಗ್ರೆಸ್ ನಾಯಕ ಅಲ್ಲಂ ವೀರಭದ್ರಪ್ಪ ಅವರು ಒಂದು ನಿವೇಶನ ಖರೀದಿ ಮಾಡುವುದಾಗಿ ಅಡ್ವಾನ್ಸ್ ಕೊಡುತ್ತಾರೆ. ಆದರೆ, ಅವರು ಪೂರ್ಣ ಮೊತ್ತ ಕೊಡುವುದಿಲ್ಲ. ಆಮೇಲೆ ಈ ವ್ಯಕ್ತಿ ಮಧ್ಯಪ್ರವೇಶ ಮಾಡುತ್ತಾರೆ. ಈ ವ್ಯಕ್ತಿ ಮಂತ್ರಿಯಾದ ಮೇಲೆ ರಾತ್ರೋರಾತ್ರಿ ಅವರನ್ನು ಕರೆಸಿ ಹೆದರಿಸಿ, ಬೆದರಿಸಿ ಸೇಲ್ ಅಗ್ರಿಮೆಂಟಿಗೆ ರುಜು ಹಾಕಿಸಿಕೊಂಡಿದ್ದಾರೆ. ಇಂಥ ವ್ಯಕ್ತಿ ದೇವೇಗೌಡರ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾವು ಮಾಡಿಲ್ಲ ಎಂದು ಕೇಂದ್ರ ಸಚಿವರು ಗುಡುಗಿದರು.
4
+ ಗನ್ ಇಟ್ಟು ವಿಧವಾ ತಾಯಂದಿರ ನಿವೇಶನಗಳನ್ನು ರಿಜಿಸ್ಟರ್ ಮಾಡಿಸಿಕೊಂಡವರು ನೀವು, ಅನ್ಯಾಯವಾಗಿ ಕಂಡೋರ ಆಸ್ತಿಯನ್ನು ಕಬ್ಜ ಮಾಡಿದವರು ನೀವು.. ಇಂಥ ಕೆಟ್ಟ ಹಿನ್ನೆಯ ನೀವು ನನ್ನ ಬಗ್ಗೆ ಮಾತನಾಡುತ್ತಿದ್ದೀರಿ. ಬನ್ನಿ ಪ್ರಮಾಣ ಮಾಡೋಣ. ಅಜ್ಜಯನ ಮುಂದೆ ಆಗಲಿ, ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಅಮ್ಮನ ಮುಂದೆ ಆಗಲಿ ಪ್ರಮಾಣ ಮಾಡೋಣ. ನೀವೇ ವಿಧಾನಸೌಧಕ್ಕೆ ಬನ್ನಿ ಎಂದು ಕರೆದಿದ್ದಿರಲ್ಲ.. ಅಲ್ಲಿಗೂ ಬರಲು ನಾನು ತಯಾರಿದ್ದೇನೆ. ಬನ್ನಿ ಚರ್ಚೆ ಮಾಡೋಣ ಎಂದು ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಗೆ ಸವಾಲು ಹಾಕಿದರು.
5
+ ಈಗ ಚನ್ನಪಟ್ಟಣಕ್ಕೆ ಬಂದು ಏನೋ ಉದ್ದಾರ ಮಾಡುತ್ತೇವೆ ಎಂದು ಅಣ್ಣ ತಮ್ಮ ಬಂದಿದ್ದಾರೆ. ನೂರಾರು ವರ್ಷ ಬಾಳಿ ಬದುಕಿರುವ ಮನೆಗಳಿಗೆ ಈಗ ಬಂದು ಹಕ್ಕುಪತ್ರ ಕೊಡುತ್ತಾರಂತೆ. ಹಾಗಾದರೆ, ರಾಜ್ಯದಲ್ಲಿ ನಿಮ್ಮ ಸರಕಾರ ಬಂದು ಒಂದೂವರೆ ವರ್ಷ ಆಯಿತಲ್ಲವೇ..ಇಷ್ಟು ದಿನ ಏನು ಮಾಡ್ತಿದ್ರಪ್ಪ? ಎಂದು ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದರು.
6
+ ಚನ್ನಪಟ್ಟಣವನ್ನು ಉದ್ಧಾರ ಮಾಡಿರೋದು ಇಲ್ಲಿನ ಜನರಿಗೆ ಬಹಳ ಚೆನ್ನಾಗಿ ಗೊತ್ತಿದೆ. ಇಲ್ಲಿನ ಮತ್ತಿಕೆರೆ ಬಳಿ ಕಲ್ಲು ಗೋಡೋನ್ ಇದೆ. ಅಲ್ಲಿ ಹೋಗಿ ನೋಡಿ, ಎಷ್ಟು ಕಲ್ಲುಗಳನ್ನು ತಂದು ಇಲ್ಲಿ ಗುಡ್ಡೆ ಹಾಕ್ತಿದ್ದೀರಿ? ಎಲ್ಲೆಲ್ಲಿಗೆ ಕಳಿಸುತ್ತಿದ್ದೀರಿ? ನನಗೆ ಗೊತ್ತಿಲ್ಲದ ವಿಷಯವೇ? ಎಂದ ಕೇಂದ್ರ ಸಚಿವರು ಬಹಿರಂಗ ಸಭೆಯಲ್ಲಿ ಆ ಕಲ್ಲು ಗೋದಾಮುಗಳ ಪೋಟೊಗಳನ್ನು ತೋರಿಸಿ,ಇದಕ್ಕೆ ಉತ್ತರ ಕೊಡಪ್ಪಾ..? ಎಂದು ಕೇಳಿದರು ಕುಮಾರಸ್ವಾಮಿ ಅವರು.
7
+ ಕನಕಪುರದ ಎಷ್ಟು ದಲಿತ ಕುಟುಂಬಗಳ ಹಾಳು ಮಾಡಿದ್ದೀರಿ ನೀವು. ಆ ಜನ ಕಣ್ಣಲ್ಲಿ ನೀರು ಹಾಕಿದ್ದನ್ನು ನಾನು ನೋಡಿದ್ದೇನೆ. ಕುಮಾರಸ್ವಾಮಿ ರೈತನ ಮಗ ಅಲ್ಲ ಎಂದಿದ್ದಾರೆ ಅವರು. ಫ್ಯಾಂಟ್ ತೆಗೆದು ಪಂಚೆ ಹಾಕಿದ್ರೆ ರೈತ ಅಲ್ಲ ಎಂದು ಹೇಳಿದ್ದಾರೆ. ಬನ್ನಿ, ಬಿಡದಿಗೆ ಬಂದು ನೋಡಿ. 20 ಟನ್ ಕೊಬ್ಬರಿ ಬೆಳೆದಿದ್ದೇನೆ. ತೆಂಗು, ಬಾಳೆ, ಅಡಕೆಯಲ್ಲಿ 50 ಲಕ್ಷ ರೂಪಾಯಿ ರೈತನಾಗಿ ಸಂಪಾದನೆ ಮಾಡಿದ್ದೇನೆ. ನಿಮ್ಮಿಂದ ಇದು ಸಾಧ್ಯವೇ? ಎಂದು ಸಚಿವರು ಟಾಂಗ್ ಕೊಟ್ಟರು.
8
+ ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ಮತ್ತು ದೇವೇಗೌಡರು ಮಾಡಿದ್ದಾರೆ ಎಂದು ಕೇಳುತ್ತಿದ್ದಾರೆ. ದೇವೇಗೌಡರ ಕಾಲದಲ್ಲಿ ಇಗ್ಗಲೂರು ಜಲಾಶಯ ಕಟ್ಟಲು ಹೋದರು. ಕೆಲವರು ಆಗಲ್ಲ ಎಂದು ಹೇಳಿದರು. ಆದರೆ, ದೇವೇಗೌಡರು ಪಟ್ಟು ಹಿಡಿದು ಆ ಯೋಜನೆಯನ್ನು ಕಾರ್ಯಗತ ಮಾಡಿದರು. ಇವತ್ತು ಈ ನೆಲಕ್ಕೆ ಆ ಜಲಾಶಯ ಜೀವನಾಡಿ ಆಗಿದೆ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ತಿರುಗೇಟು ಕೊಟ್ಟರು.
9
+ ಚನ್ನಪಟ್ಟಣದಲ್ಲಿ ಕೆರೆಗಳನ್ನು ತುಂಬಿಸುವ ಕೆಲಸ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ನಾನು, ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗಿದ್ದಾಗ ಕೆರೆಗಳನ್ನು ತುಂಬಿಸಲಾಯಿತು. ಯೋಗೇಶ್ವರ್ ಕೂಡ ಮಂತ್ರಿಯಾಗಿ ಕೆಲಸ ಮಾಡಿದರು. ಕಾಂಗ್ರೆಸ್ ನವರು ಏನೂ ಮಾಡಿಲ್ಲ ಎಂದು ಅವರು ಕಿಡಿಕಾರಿದರು.
10
+ ರಾಜ್ಯದಲ್ಲಿ ನಿಮ್ಮ ಆಡಳಿತ, ನಿರ್ವಹಣೆ ಕೆಟ್ಟದಾಗಿದೆ. ಗ್ಯಾರಂಟಿ ಎಂದು ಕೊಟ್ಟಿದ್ದೀರಿ. ಯಾರಿಗೆ ಲಾಭವಾಗಿದೆ ಅದರಿಂದ, ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ‌? ರೈತ ಟಿಸಿ ದರ ಎಷ್ಟಾಗಿದೆ? ಸರಣಿ ಹಗರಣಗಳ ರೀತಿಯಲ್ಲಿ ಸರಣಿ ಬೆಲೆ ಏರಿಕೆ ಮಾಡಿದ್ದೀರಿ. ರೈತರಿಗೆ ಆದಾಯ ಇಲ್ಲ. ರೈತರಿಗೆ ಏನು ಕೊಟ್ಟಿದ್ದೀರಿ? ಬರೀ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
11
+ ದಲಿತರ ಬಗ್ಗೆ ಇವರು ಚರ್ಚೆ ಮಾಡ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದರೋಡೆ ಮಾಡಿದ್ದಾರೆ. ಹಣ ದೋಚಿರೋ ಸಿದ್ದರಾಮಯ್ಯ, ಡಿಕೆಶಿ ಇಲ್ಲಿ ಬಂದು ದಲಿತರ ಬಗ್ಗೆ ಚರ್ಚೆ ಮಾಡ್ತೀರಾ? ಹೆಚ್ಡಿಕೆ ವಾಗ್ದಾಳಿ ನಡೆಸಿದರು.
12
+ ಗಿಫ್ಟ್ ಕೂಪನ್ ಹಂಚಿ 136 ಸೀಟು ಗೆದ್ದರು!!ನಾವು 136 ಸೀಟು ಗೆದ್ದು ಅಧಿಕಾರಕ್ಕೆ ಬಂದಿದೇವೆ ಎಂದು ಕಾಂಗ್ರೆಸ್ ನಾಯಕರು ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೂಪನ್ ಹಂಚಿ ರಾಜಕಾರಣ ಮಾಡಿದೆ. ಲುಲು ಮಾಲ್ ಕೂಪನ್ ಕೊಟ್ಟವ್ರೆ. ಮೂರು ಸಾವಿರ, ಐದು ಸಾವಿರ ಕೂಪನ್ ಕೊಟ್ಟಿದ್ದರು. ಅದನ್ನು ತೆಗೆದುಕೊಂಡು ಹೋಗಿ ಲುಲು ಮಾಲ್ ನಲ್ಲಿ ಕೊಟ್ಟರೆ ಅದರಲ್ಲಿ ದುಡ್ಡೇ ಇಲ್ಲ. ಜ���ರಿಗೆ ಕಾಂಗ್ರೆಸ್ ನವರು ಮೋಸ ಮಾಡಿದ್ದು ಹೀಗೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
eesanje/url_46_52_12.txt ADDED
@@ -0,0 +1,6 @@
 
 
 
 
 
 
 
1
+ ಪಿಎಸ್‌‍ಐ ಪರುಶುರಾಮ್‌ ಶಂಕಾಸ್ಪದ ಸಾವು : ಸಿಬಿಐ ತನಿಖೆಗೆ ಆಗ್ರಹ
2
+ ಬೆಂಗಳೂರು,ಆ.5-ಯಾದಗಿರಿ ಪಿಎಸ್‌‍ಐ ಪರುಶುರಾಮ್‌ ಶಂಕಾಸ್ಪದ ಸಾವು ಕುರಿತು ಸಿಬಿಐ ತನಿಖೆಗೆ ವಹಿಸುವಂತೆ ಅಂಬೇಡ್ಕರ್ಮಾನವ ಹಕ್ಕುಗಳ ಕ್ರಾಂತಿಸೇನೆ ಆಗ್ರಹಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಅಂಬೇಡ್ಕರ್‌ ಮಾನವ ಹಕ್ಕುಗಳ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷರಾದ ಕ್ರಾಂತಿರಾಜು ಮಾತನಾಡಿ, ಸ್ವಾತಂತ್ರ್ಯ ಬಂದ 77 ವರ್ಷಗಳು ಕಳೆದರೂ ಇಂದಿಗೂ ಸಹ ದಲಿತರ ಮೇಲೆ ಜಾತಿನಿಂದನೆ, ದೌರ್ಜನ್ಯ ನಡೆಯುತ್ತಿದೆ. ಇತ್ತಿಚೇಗೆ ರಾಜ್ಯದಲ್ಲಿ ದಲಿತ ಸಮುದಾಯದ ಅಧಿಕಾರಿಗಳು ಭ್ರಷ್ಟಚಾರದ ವಿರುದ್ಧ ಸೆಣೆಸಲು ಆಗದೇ ಸಾವಿಗೆ ಶರಣುಗಾತ್ತಿದ್ದಾರೆ.
3
+ ಯಾದಗಿರಿ ಪೊಲೀಸ್‌‍ ಠಾಣೆ ಪಿಎಸ್‌‍ಐ ಪರುಶುರಾಮ್‌ ಶಂಕಸ್ಪಾದ ಸಾವು ಸಂಭವಿಸಿದ ಕಾರಣ ಕುರಿತು ಪರುಶುರಾಮ್‌ ರವರ ಪತ್ನಿ ಶ್ವೇತ್ರಾ ರವರು ಶಾಸಕರಾದ ಚನ್ನಾರೆಡ್ಡಿ ಪಾಟೀಲ್‌ ಮತ್ತು ಆತನ ಪುತ್ರ 30 ಲಕ್ಷ ರೂ. ಲಂಚ ಬೇಡಿಕೆ ಹಾಗೂ ಜಾತಿ ನಿಂದನೆ ಮಾಡಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಪರುಶುರಾಮ್‌ ರವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ. ಶಾಸಕರ ಮತ್ತು ಮಗನ ಮೊಬೈಲ್‌ ಕಾಲ್‌ ರೆಕಾರ್ಡ್‌ ಮತ್ತು ಸಿ.ಸಿ.ಕ್ಯಾಮರ ಪರಿಶೀಲನೆ ಮಾಡಿ ತನಿಖೆ ಮಾಡಬೇಕು ಎಂದರು.
4
+ ರಾಜ್ಯದಲ್ಲಿರುವ ನಿಷ್ಟಾವಂತ ದಲಿತ ಸಮುದಾಯದ ಅಧಿಕಾರಿಗಳ ಮೇಲೆ ಕಿರುಕುಳ, ದೌರ್ಜನ್ಯ ನಡೆಯುತ್ತಿದೆ.ಲಂಚ, ಭ್ರಷ್ಟಚಾರ ತಾಂಡವವಾಡುತ್ತಿದೆ. ಪ್ರತಿ ಹ್ದುೆಗೆ ವರ್ಗಾವಣೆಗೆ ಇಂತಿಷ್ಟು ಲಂಚ ಫಿಕ್‌್ಸ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ನಿಷ್ಟಾವಂತ, ಪ್ರಾಮಾಣಿಕ ಅಧಿಕಾರಿಗಳು ಕೆಲಸ ಮಾಡಲು ಎಂದು ಪ್ರಶ್ನಿಸಿದರು.
5
+ ಕೊಡಲೆ ಶಾಸಕರು ಹಾಗ್ತೂ ಅವರ ಪುತ್ರನ ವಿರುದ್ಧ ಕ್ರಮಕೈಗೊಳ್ಳಬೇಕು ಇಲ್ಲದೇ ಹೋದರೆ ಮುಂದಿನ ವಾರ ಪೊಲೀಸ್‌‍ ಮಹಾನಿರ್ದೇಶಕರ ಕಛೇರಿ ಮುಂಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಮುಖಂಡರು, ಚಿಂತಕರು, ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಪಿಎಸ್‌‍ಐ ಪರುಶುರಾಮ್‌ ಶಂಕಾಸ್ಪದ ಸಾವಿಗೆ ನ್ಯಾಯ ಸಿಗಬೇಕು ಎಂದರೆ ಮುಖ್ಯಮಂತ್ರಿಗಳು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು
6
+ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಚಿದರಹಳ್ಳಿ ಮಹಾದೇವಸ್ವಾಮಿ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ವಿ.ಗಿರಿಕುಮಾರ್‌, ಹಿರಿಯ ಹೋರಾಟಗಾರರಾದ ಉಮಾಶಂಕರ್‌, ಕಾರ್ಮಿಕರ ಒಕ್ಕೂಟದ ಅಧ್ಯಕ್ಷರಾದ ಬಿ.ದೇವರಾಜ್‌ ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಿದ್ದರು.
eesanje/url_46_52_2.txt ADDED
@@ -0,0 +1,6 @@
 
 
 
 
 
 
 
1
+ ಡಿಎಲ್‌ ಮತ್ತು ಆರ್‌ಸಿ ಕುರಿತು ರಾಜ್ಯ ಸಾರಿಗೆ ಇಲಾಖೆಯಿಂದ ಹೊಸ ಮಾದರಿ ವ್ಯವಸ್ಥೆ
2
+ ಬೆಂಗಳೂರು,ಆ.7– ರಾಜ್ಯದಲ್ಲಿ ವಾಹನ ಚಾಲಕರಿಗೆ ನೀಡಲಾಗುವ ವಾಹನ ಚಾಲನಾ ಪರವಾನಗಿ ಮತ್ತು ವಾಹನ ನೋಂದಣಿ ಪ್ರಮಾಣಪತ್ರದ ಸ್ವರೂಪ ಬದಲಿಸಲಾಗುತ್ತಿದ್ದು, ಮೈಕ್ರೋ ಚಿಪ್‌ ಜತೆಗೆ ಕ್ಯೂಆರ್‌ ಕೋಡ್‌ ಅಳವಡಿಸಿದ ಡಿಎಲ್‌ ಮತ್ತು ಆರ್‌ಸಿ ಸಾರ್ಟ್‌ ಕಾರ್ಡ್‌ ವಿತರಿಸಲು ರಾಜ್ಯ ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ದೇಶದೆಲ್ಲೆಡೆ ಡಿಎಲ್‌ ಮತ್ತು ಆರ್‌ಸಿಗಳ ಸ್ವರೂಪ ಒಂದೇ ರೀತಿಯಲ್ಲಿರಬೇಕೆಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರೂಪಿಸಿರುವ ನಿಯಮ ಅನುಷ್ಠಾನಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ.
3
+ ಎಂಒಆರ್‌ಟಿಎಚ್‌ ನೀಡಿರುವ ಮಾರ್ಗಸೂಚಿಯಂತೆ ಡ್ರೈವಿಂಗ್‌ ಲೈಸೆನ್ಸ್ ಮತ್ತು ರಿಜಿಸ್ಟ್ರೇಷನ್‌ ಸರ್ಟಿಫಿಕೆಟ್‌ ಮುದ್ರಿಸಿ, ವಿತರಿಸುವ ಖಾಸಗಿ ಸಂಸ್ಥೆಗಾಗಿ ಟೆಂಡರ್‌ ಪ್ರಕ್ರಿಯೆ ನಡೆಸಲಾಗಿದ್ದು, ಈ ತಿಂಗಳ ಅಂತ್ಯದೊಳಗೆ ಗುತ್ತಿಗೆದಾರರನ್ನು ಅಂತಿಮಗೊಳಿಸಿ ಸೆಪ್ಟೆಂಬರ್‌ನಿಂದ ಹೊಸ ಬಗೆಯ ಡಿಎಲ್‌ ಮತ್ತು ಆರ್‌ಸಿ ವಿತರಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.
4
+ ಹೊಸಬಗೆಯ ಡಿಎಲ್‌ನಲ್ಲಿ ಹಲವು ವಿವರಗಳನ್ನು ಅಳವಡಿಸಲಾಗುತ್ತಿದೆ. ಈವರೆಗೆ ಡಿಎಲ್‌ನಲ್ಲಿ ಚಾಲಕರ ಹೆಸರು, ಜನ ದಿನಾಂಕ, ವಿಳಾಸ, ರಕ್ತದ ಗುಂಪು ವಿವರಗಳು ಇರುತ್ತಿದ್ದವು. ಹೊಸ ಡಿಎಲ್‌ನಲ್ಲಿ ಆ ವಿವರಗಳ ಜತೆಗೆ ಡಿಎಲ್‌ ಹೊಂದಿರುವವರು ಅಂಗಾಂಗ ದಾನಿಯಾಗಿದ್ದಾರೆಯೇ ಎಂಬುದನ್ನು ಉಲ್ಲೇಖಿಸಲಾಗುತ್ತದೆ. ಜತೆಗೆ ಡಿಎಲ್‌ ಹೊಂದಿರುವವರ ಮೊಬೈಲ್‌ ಸಂಖ್ಯೆ, ಅವರ ಸಂಬಂಧಿಕರ ಅಥವಾ ತಕ್ಷಣದಲ್ಲಿ ಮಾಡಬಹುದಾದ ಮೊಬೈಲ್‌ ಕರೆ ಸಂಖ್ಯೆಗಳನ್ನೂ ನಮೂದಿಸಲಾಗುತ್ತದೆ.
5
+ ಸದ್ಯ ಇರುವ ಡಿಎಲ್‌ ಮತ್ತು ಆರ್‌ಸಿಯಲ್ಲಿ ಒಂದು ಬದಿಯಲ್ಲಿ ಮಾತ್ರ ಎಲ್ಲ ವಿವರಗಳಿದ್ದು, ಇನ್ನೊಂದು ಬದಿಯಲ್ಲಿ ಮೈಕೋಚಿಪ್‌ ಅಳವಡಿಸಲಾಗಿದೆ. ಹೊಸ ಡಿಎಲ್‌ ಮತ್ತು ಆರ್‌ಸಿಯ ಎರಡೂ ಬದಿಯಲ್ಲಿ ವಾಹನ ಮತ್ತು ವಾಹನ ಮಾಲೀಕರ ಅಥವಾ ಚಾಲಕರ ವಿವರ ನಮೂದಿಸಲಾಗುತ್ತದೆ. ಡಿಎಲ್‌ ಮತ್ತು ಆರ್‌ಸಿಗಳನ್ನು ಲೇಸರ್‌ ಪ್ರಿಂಟಿಂಗ್‌ನಲ್ಲಿ ಮುದ್ರಿಸಲಾಗುತ್ತದೆ. ಇನ್ನು ಕ್ಯೂಆರ್‌ ಕೋಡನ್ನು ಸ್ಕ್ಯಾನ್‌ ಮಾಡಿದರೆ ಡಿಎಲ್‌ ಮತ್ತು ಆರ್‌ಸಿಗೆ ಸಂಬಂಧಿಸಿದ ಎಲ್ಲ ವಿವರಗಳು ತಿಳಿಯುವಂತೆ ಮಾಡಲಾಗುತ್ತದೆ.
6
+ ಈವರೆಗೆ ಡಿಎಲ್‌ ಮತ್ತು ಆರ್‌ಸಿಯಲ್ಲಿ ವಾಹನ ಮತ್ತು ಚಾಲಕರ ಸಂಪೂರ್ಣ ವಿವರ ಇರುತ್ತಿರಲಿಲ್ಲ. ಹೊಸ ಡಿಎಲ್‌ ಮತ್ತು ಆರ್‌ಸಿಯಲ್ಲಿ ಚಾಲಕರು ಯಾವ ದಿನ, ಯಾವ ರೀತಿಯ ಸಂಚಾರ ನಿಯಮ ಉಲ್ಲಂಸಿದ್ದಾರೆ, ಅದಕ್ಕೆ ದಂಡ ಪಾವತಿಸಿದ್ದಾರೆಯೇ ಎಂಬಂತಹ ವಿವರಗಳು ದೊರೆಯಲಿದೆ. ಈ ವಿವರಗಳನ್ನು ಸಾರಿಗೆ ಇಲಾಖೆ ಕಾಲಕಾಲಕ್ಕೆ ಅಪ್‌ಡೇಟ್‌ ಮಾಡಲಿದೆ. ಡಿಎಲ್‌ ಹೊಂದಿರುವವರ ವಿವರಗಳ ಜತೆಗೆ, ಅವರ ಮೈಯಲ್ಲಿರುವ ಗುರುತುಗಳನ್ನೂ ನಮೂದ��ಸಲಾಗುತ್ತದೆ.
eesanje/url_46_52_3.txt ADDED
@@ -0,0 +1,6 @@
 
 
 
 
 
 
 
1
+ “ಅಫಿಡವಿಟ್‌ನಲ್ಲಿ ಪತ್ನಿ ಆಸ್ತಿ ಕುರಿತು ತಪ್ಪು ಮಾಹಿತಿ : ಸಿದ್ದರಾಮಯ್ಯನವರೇ ಈಗ ಜ್ಞಾನೋದಯವಾಯಿತೇ..?”
2
+ ಬೆಂಗಳೂರು,ಆ.6- 2013ರ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಪತ್ನಿಯ ಆಸ್ತಿ ಉಲ್ಲೇಖ ಮಾಡದೆ ತಪ್ಪು ಮಾಹಿತಿ ನೀಡುತ್ತೀರಿ. ನಂತರ 2018ರಲ್ಲಿ ಅದರ ಮಾರುಕಟ್ಟೆ ಮೌಲ್ಯ ರೂ 25 ಲಕ್ಷ ಎಂದು ನಮೂದಿಸಿದ್ದೀರಿ. 5 ವರ್ಷಗಳಾದ ಮೇಲೆ ದಿಢೀರನೆ ಆಸ್ತಿ ಹೊಂದಿರುವ ಬಗ್ಗೆ ಜ್ಞಾನೋದಯವಾಯಿತಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನೆ ಎಸೆದಿದ್ದಾರೆ.
3
+ ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿದ್ದರಾಮಯ್ಯ ಅವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿರುವ ಆಶೋಕ್‌ ಅವರು, ಹಗರಣ ಬೆಳಕಿಗೆ ಬಂದ ಮೇಲೆ 63 ಕೋಟಿ ಕೊಡಿ ಸೈಟು ಬಿಟ್ಟುಕೊಡುತ್ತೇನೆ ಎಂದು ಹೇಳುತ್ತೀರಿ. 2018ರಲ್ಲಿ ರೂ 25 ಲಕ್ಷ ಇದ್ದ ಆಸ್ತಿ ಮೌಲ್ಯ, 2024ರಲ್ಲಿ ರೂ 63 ಕೋಟಿ ಆಗಲು ಹೇಗೆ ಸಾಧ್ಯ? ಇದೇನಾದರೂ ರಾಹುಲ್‌ ಗಾಂಧಿ ಅವರ ಆಲೂಗಡ್ಡೆ ಹಾಕಿ ಚಿನ್ನ ತೆಗೆಯುವ ಯೋಜನೆಯ ಭಾಗವಾ? ಎಂದು ವ್ಯಂಗ್ಯವಾಡಿದ್ದಾರೆ.
4
+ 50:50ರ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಕೊಡುವುದು ಬೇಡ ಎಂದು ನಗರಾಭಿವೃದ್ಧಿ ಇಲಾಖೆ ಆದೇಶವಿದ್ದರೂ ಅದನ್ನ ಉಲ್ಲಂಸಿ ಮೂಡಾ ಅಧ್ಯಕ್ಷ ಮರಿಗೌಡ ಅವರು ಹಗರಣದ ಬಾಗಿಲನ್ನು ತೆಗೆದಿದ್ದು ಏಕೆ? ಇದರ ಹಿಂದೆ ಯಾವ ಪ್ರಭಾವಿ ಶಕ್ತಿ ಕೆಲಸ ಮಾಡುತ್ತಿತ್ತು? ಉತ್ತರ_ ಕೊಡಿ_ಸಿದ್ದರಾಮಯ್ಯ ಎಂದು ಆಗ್ರಹಿಸಿದ್ದಾರೆ.
5
+ ಆತಹತ್ಯೆಗೆ ಶರಣಾದ ವಾಲೀಕಿ ಅಭಿವೃದ್ಧಿ ನಿಗಮದ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್‌ ಅವರು ತಮ ಡೆತ್‌ ನೋಟ್‌ ನಲ್ಲಿ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶದಂತೆ ಅವ್ಯವಹಾರ ನಡೆದಿದೆ ಎಂದು ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದರೂ, ಎಸ್‌‍ಐಟಿ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸವರಾಜ ದದ್ದಲ್‌ ಹೆಸರನ್ನು ನಮೂದಿಸಿಲ್ಲದಿರುವುದು ಎಸ್‌‍ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಎಂದು ಸರ್ಕಾರದ ವಿರುದ್ದ ವಾಗ್ದಳಿ ನಡೆಸಿದ್ದಾರೆ.
6
+ ಸಿಎಂ ಸಿದ್ದರಾಮಯ್ಯನವರೇ, ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್‌ ಅವರ ಹೆಸರನ್ನು ನಮೂದಿಸಿದರೆ ಅವರು ತಮ ಹೆಸರು ಬಾಯಿ ಬಿಡುತ್ತಾರೆ ಎಂಬ ಭಯವೇ? ಅಥವಾ ಈ ಹಗರಣವನ್ನ ಶಾಶ್ವತವಾಗಿ ಮುಚ್ಚಿಹಾಕುವ ಹುನ್ನಾರವೇ? ಎಂದು ಆಶೋಕ್‌ ಪ್ರಶ್ನೆ ಮಾಡಿದ್ದಾರೆ.
eesanje/url_46_52_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ 4ನೇ ದಿನಕ್ಕೆ ಕಾಲಿಟ್ಟ ‘ಮೈಸೂರು ಚಲೋ’, ಮಂಡ್ಯದಲ್ಲಿ ದೋಸ್ತಿಗಳ ಒಗ್ಗಟ್ಟಿನ ಹೆಜ್ಜೆ
2
+ ಬೆಂಗಳೂರು,ಆ.6– ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ನಡೆಸುತ್ತಿರುವ ಜಂಟಿ ಹೋರಾಟದಲ್ಲಿ ಟಾರ್ಗೆಟ್‌ ಆಗುತ್ತಿರುವವವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತ್ರ!ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಎನ್‌ಡಿಎ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರುವರೆಗೆ ನಡೆಸುತ್ತಿರುವ ಪಾದಯಾತ್ರೆ ಪ್ರಾರಂಭ ವಾಗಿ 4ನೇ ದಿನಕ್ಕೆ ಕಾಲಿಟ್ಟಿದೆ.
3
+ ಅಸಲಿಗೆ ಎರಡೂ ಪಕ್ಷಗಳಿಗೆ ಗುರಿಯಾಗಬೇಕಾಗಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದರೆ ಬಿಜೆಪಿ-ಜೆಡಿಎಸ್‌‍ ಗುರಿ ಡಿಸಿಎಂ ಶಿವಕುಮಾರ್‌ ಆಗುತ್ತಿದ್ದಾರೆ.ಪಾದಯಾತ್ರೆ ಪ್ರಾರಂಭಕ್ಕೂ ಮುನ್ನವೇ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸಿದ್ದ ಶಿವಕುಮಾರ್‌ ಮುಖ್ಯವಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರನ್ನು ಗುರಿಯಾಗಿಟ್ಟುಕೊಂಡು ಕೆಂಡ ಕಾರುತ್ತಿದ್ದಾರೆ.
4
+ ಇದಕ್ಕೆ ಪ್ರತಿಯಾಗಿ ನಾವೇನು ಕಡಿಮೆ ಎಂಬಂತೆ ಕುಮಾರಸ್ವಾಮಿ, ವಿಜಯೇಂದ್ರ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಸಿದ್ದರಾಮಯ್ಯನವರನ್ನು ಬದಿಗಿರಿಸಿ, ಡಿ.ಕೆ.ಶಿವಕುಮಾರ್‌ ಅವರನ್ನು ವೈಯಕ್ತಿಕ ನೆಲಗಟ್ಟಿನಲ್ಲಿ ದಾಳಿ ನಡೆಸುತ್ತಿರುವುದು ಪಾದಯಾತ್ರೆಯ ವಿಶೇಷವಾಗಿದೆ.
5
+ ಪಾದಯಾತ್ರೆಯುದ್ದಕ್ಕೂ ಡಿ.ಕೆ.ಶಿವಕುಮಾರ್‌ ಮತ್ತು ಕುಮಾರಸ್ವಾಮಿ ಅವರುಗಳು ತಮ ಕುಟುಂಬದ ಆಸ್ತಿ ವಿಷಯವೂ ಪ್ರಸ್ತಾಪವಾಗಿದೆ. ಅದರಲ್ಲೂ ಪ್ರತಿದಿನ ಜನಾಂದೋಲನ ನಡೆಸುತ್ತಿರುವ ಡಿಕೆಶಿ ಎರಡೂ ಪಕ್ಷಗಳ ಭ್ರಷ್ಟಾಚಾರವನ್ನು ಜನತೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದಾರೆ.
6
+ ಇದಕ್ಕೆ ಪ್ರತಿಯಾಗಿ ಸೇರಿಗೆ ಸವ್ವಾ ಸೇರು ಎಂಬಂತೆ ಕುಮಾರಸ್ವಾಮಿ ಕೂಡ ಡಿಕೆಶಿಯನ್ನು ಗುರಿಯಾಗಿಟ್ಟುಕೊಂಡು ಹಿಂದೆಂದಿಗಿಂತಲೂ ಆಕ್ರಮಣಕಾರಿ ಶೈಲಿಯಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ.ಡಿಕೆಶಿ ಭ್ರಷ್ಟಾಚಾರದ ಪಿತಾಮಹ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡದಿರುವುದೇ ಲೇಸು ಎಂದು ಬಿ.ವೈ.ವಿಜಯೇಂದ್ರ ಮಾಡಿದ ಆರೋಪವೇ ಇದಕ್ಕೆ ಮುನ್ನುಡಿ ಬರೆದಿತ್ತು.
7
+ ಯಾವಾಗ ವಿಜಯೇಂದ್ರ ತಮ ಮೇಲೆ ಇಷ್ಟು ವೈಯಕ್ತಿಕ ನೆಲಗಟ್ಟಿನಲ್ಲಿ ಆರೋಪ ಮಾಡಿದರೋ ಆಗ ಕೆರಳಿ ಕೆಂಡವಾದ ಡಿಕೆಶಿಯವರು ಯಡಿಯೂರಪ್ಪ ಹಾಗೂ ವಿಜಯೇಂದ್ರರ ಜೊತೆಗೆ ಕುಮಾರಸ್ವಾಮಿ ಕುಟುಂಬದವರ ವಿರುದ್ಧ ಆರೋಪಗಳ ಸುರಿಮಳೆಗೈದರು.
8
+ ಇಡೀ ಪಾದಯಾತ್ರೆಯು ಕುಮಾರಸ್ವಾಮಿ ಹಾಗೂ ಡಿಕೆಶಿ ಅವರ ಆಸ್ತಿ ಸಮರವಾಗಿ ಮಾರ್ಪಟ್ಟಿದ��. ನಾನು ನಿನ್ನ ಹಾಗೆ ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ ಎಂದು ಒಬ್ಬರು ಹೇಳಿದರೆ, ಮತ್ತೊಬ್ಬರು ಕನಕಪುರದ ಟೆಂಟ್‌ನಲ್ಲಿ ಸಿನಿಮಾ ತೋರಿಸಿ ಆಸ್ತಿ ಬರೆಸಿಕೊಂಡಿದ್ದೇನೆಯೇ ಎಂದು ತಿರುಗೇಟು ಕೊಡುತ್ತಿದ್ದಾರೆ.
9
+ ಯಾವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಗುರಿಯಾಗಬೇಕಾಗಿತ್ತೋ ಬದಲಿಗೆ ಇಲ್ಲಿ ಶಿವಕುಮಾರ್‌ ಎರಡೂ ಪಕ್ಷಗಳಿಗೆ ಆಹಾರವಾಗಿದ್ದಾರೆ.ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಳೆ ಮೈಸೂರು ವಿಭಾಗದ ಪ್ರಾಂತ್ಯದಲ್ಲಿ ಎನ್‌ಡಿಎ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿತ್ತು. 14 ಲೋಕಸಭಾ ಕ್ಷೇತ್ರಗಳ ಪೈಕಿ ಹಾಸನ, ಚಾಮರಾಜನಗರ ಹೊರತುಪಡಿಸಿದರೆ 12 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟ ಗೆದ್ದುಕೊಂಡಿತ್ತು.
10
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಳೆ ಮೈಸೂರು ವಿಭಾಗ ಬಹುತೇಕ ಕಾಂಗ್ರೆಸ್‌‍ಮಯವಾಗಿತ್ತು. ಜೆಡಿಎಸ್‌‍ನ ಭದ್ರಕೋಟೆಯನ್ನು ಡಿಕೆಶಿ ಯಶಸ್ವಿಯಾಗಿ ಬೇಧಿಸಿದ್ದರು.ಯಾವಾಗ ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶ ವ್ಯತಿರಿಕ್ತವಾಗಿ ಹೊರಬಂದಿತೋ, ಅಸ್ತಿತ್ವ ಉಳಿಸಿಕೊಳ್ಳಲು ಕುಮಾರಸ್ವಾಮಿ ಮತ್ತು ಡಿಕೆಶಿ ಪೈಪೋಟಿಗೆ ಬಿದ್ದಂತೆ ವಾಕ್ಸಮರಕ್ಕೆ ನಿಂತಿದ್ದಾರೆ.
11
+ ಇಬ್ಬರ ಜಗಳದಲ್ಲಿ ಸಿದ್ದರಾಮಯ್ಯ ಪ್ರಕರಣ ಗೌಣವಾಗಿದೆ. ಈ ಎಲ್ಲಾ ಆಟವನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸದ್ದಿಲ್ಲದೆ ಹಳೆ ಮೈಸೂರಿನಲ್ಲಿ ಪಕ್ಷ ಸಂಘಟನೆಯ ಬೇರುಗಳನ್ನು ಬಲಪಡಿಸಿಕೊಳ್ಳುತ್ತಿದೆ.
eesanje/url_46_52_5.txt ADDED
@@ -0,0 +1,7 @@
 
 
 
 
 
 
 
 
1
+ ಬೆಂಗಳೂರು-ಮಂಗಳೂರು ನಡುವೆ ಆ.8ರ ವರೆಗೆ ರೈಲು ಸಂಚಾರ ರದ್ದು
2
+ ಬೆಂಗಳೂರು, ಆ. 6-ಪಶ್ಚಿಮ ಘಟ್ಟದಲ್ಲಿ ಮಳೆಯಾಗುತ್ತಿರುವ ಪರಿಣಾಮ ಭೂಕುಸಿತ ಉಂಟಾಗಿ ಎಡಕುಮರಿ- ಕಡಗವಳ್ಳಿ ರೈಲ್ವೆ ಮಾರ್ಗ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆ. 8ರವರೆಗೆ 12 ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ.
3
+ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿತ್ತು. ಎಡಕುಮರಿ ಕಡಗವಳ್ಳಿ ರೈಲ್ವೆ ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ಬೆಂಗಳೂರು- ಮಂಗಳೂರು ಮಧ್ಯೆ ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು.
4
+ ಈ ಮಾರ್ಗದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಅದು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆ.8ರವರೆಗೆ 12 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಕೆಎಸ್‌‍ಆರ್‌ ಬೆಂಗಳೂರು- ಕಾರವಾರ ಎಕ್ಸ್ ಪ್ರೆಸ್‌‍ ರೈಲು ಸಂಚಾರ ಆ.7ರವರೆಗೆ ರದ್ದಾಗಲಿದೆ.
5
+ ಕಾರವಾರ ಕೆಎಸ್‌‍ಆರ್‌ ಬೆಂಗಳೂರು ಎಕ್ಸ್ ಪ್ರೆಸ್‌‍- ಕಾರವಾರ ಮಡಗಾಂವ್‌, ಮಡಗಾಂವ್‌- ಕಾರವಾರ ವಿಶೇಷ ರೈಲಿನ ಸಂಚಾರವನ್ನು ಆ.8ರ ವರೆಗೆ ರದ್ದು ಮಾಡಲಾಗಿದೆ. ಸರ್‌.ಎಂ. ವಿಶ್ವೇಶ್ವರಯ್ಯ- ಮುರ್ಡೇಶ್ವರ ಎಕ್ಸ್ ಪ್ರೆಸ್‌‍, ಯಶವಂತಪುರ- ಕಾರವಾರ ಎಕ್ಸ್ ಪ್ರೆಸ್‌‍ ರೈಲುಗಳ ಸಂಚಾರವನ್ನು ಆ. 8ರವರೆಗೆ ಸಂಪೂರ್ಣವಾಗಿ ರದ್ದು ಮಾಡಲಾಗಿದೆ.
6
+ ಕಳೆದ ವಾರ ಸುರಿದ ಭಾರೀ ಮಳೆಗೆ ದೋಣಿ ಹಗಲ್‌ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತ ಉಂಟಾಗಿತ್ತು. ಇದೀಗ ಭೂಕುಸಿತದ ಸ್ಥಳದಲ್ಲಿ ತಡೆಗೋಡೆ ಕಾಮಗಾರಿ ಪೂರ್ಣಗೊಂಡಿದ್ದು, ಹಳಿ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣಗೊಂಡಿವೆ.
7
+ ಪ್ರಾಯೋಗಿಕವಾಗಿ ಗೂಡ್ಸ್ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದುರಸ್ಥಿ ಕಾರ್ಯ ನಡೆಯುತ್ತಿರುವ ಸ್ಥಳ ಹಾಗೂ ಆಸುಪಾಸಿನಲ್ಲಿ 15 ಕಿಲೋ ಮೀಟರ್‌ ವೇಗದಲ್ಲಿ ಗೂಡ್ಸ್ ರೈಲಿನ ಪ್ರಾಯೋಗಿಕ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಅವಕಾಶ ನೀಡಿಲ್ಲ. ಆ. 8ರವರೆಗೆ ಬೆಂಗಳೂರು- ಮಂಗಳೂರು ಮಧ್ಯೆ ರೈಲ್ವೇ ಸಂಚಾರ ರದ್ದುಗೊಳಿಸಿದ್ದು, ಆ. 8ರ ನಂತರ ಪ್ರಯಾಣಿಕರ ರೈಲು ಸಂಚಾರಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ.
eesanje/url_46_52_6.txt ADDED
@@ -0,0 +1,7 @@
 
 
 
 
 
 
 
 
1
+ ಕೇಂದ್ರದಿಂದ ಕೊಬ್ಬರಿ ಖರೀದಿ, ತುಮಕೂರು ರೈತರ ಖಾತೆಗೆ 346 ಕೋಟಿ ನೇರ ಪಾವತಿ
2
+ ಬೆಂಗಳೂರು,ಆ.6-ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸಲ್ಪಟ್ಟ ಉಂಡೆ ಕೊಬ್ಬರಿ ಮೊತ್ತ 346.50 ಕೋಟಿ ರೂ. ರೈತರ ಖಾತೆಗೆ ನೇರವಾಗಿ ಪಾವತಿಸಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
3
+ 2024ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ ಒಟ್ಟು 3,15,000 ಕ್ವಿಂಟಾಲ್‌ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು ರೂ.378 ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸ ಬೇಕಾಗಿತ್ತು.
4
+ ಈ ಸಂಬಂಧ 2024 ಆಗಸ್ಟ್‌ 5ರ ವರೆಗೆ ಸುಮಾರು 346.50 ಕೋಟಿ ಮೊತ್ತವನ್ನು (ಪ್ರತಿಶತ 92 ರಷ್ಟು) ರೈತರ ಖಾತೆಗೆ ನೇರವಾಗಿಪಾವತಿಸಲಾಗಿದೆ.ಶೀಘ್ರ ಹಣ ಪಾವತಿಗೆ ಸಚಿವ ಸೋಮಣ್ಣಅವರ ಮನವಿ ಮಾಡಿದ್ದರು.
5
+ ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು ಸುಮಾರು 24600 ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸ ಲಾಗಿದೆಯೆಂದು ತಿಳಿಸಿದ್ದಾರೆ,ಬಾಕಿ ಉಳಿದ ಸುಮಾರು 2438 ರೈತರ ಖಾತೆಗೆ ಇನ್ನು 31.64ಕೋಟಿ ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ ಇದು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಏಜೆನ್ಸಿಗೆ ನಿರ್ದೆಶನ ನೀಡಲಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
6
+ ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ ರೂ.691 ಕೋಟಿಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿಸಚಿವ ಸೋಮಣ್ಣ ಅವರು ತಿಳಿಸಿದ್ದಾರೆ.
7
+ ರೈತರ ಖಾತೆಗೆ ಹಣ ಸಂದಾಯವಾದ ಬಗ್ಗೆ ಸಂತಸ ವ್ಯಕ್ತಪಡಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ತುಮಕೂರಿನ ರೈತರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
eesanje/url_46_52_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾನೂನು ಓದಿದ್ದೇನೆ ಎನ್ನುವ ಸಿದ್ದರಾಮಯ್ಯನವರಿಗೆ ಕನಿಷ್ಠ ಜ್ಞಾನ ಇರಬೇಕಿತ್ತು : ಪಿ.ರಾಜೀವ್‌
2
+ ಬೆಂಗಳೂರು,ಆ.6-ತಾವು ಲಾ (ಕಾನೂನು) ಓದಿದ್ದಾಗಿ ಸಿದ್ದರಾಮಯ್ಯನವರು ಮಾತುಮಾತಿಗೆ ಹೇಳುತ್ತಾರೆ. ಲಾ ಎಲ್ಲರಿಗೂ ಒಂದೇ ಎಂಬ ಕನಿಷ್ಠ ಜ್ಞಾನ ಮುಖ್ಯಮಂತ್ರಿಗಳಿಗೆ ಇರಬೇಕಿತ್ತು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಅವರು ತಿಳಿಸಿದರು.
3
+ ಮದ್ದೂರಿನಲ್ಲಿ ಶಾಸಕ ಡಿ.ಸಿ.ತಮಣ್ಣರವರ ಮನೆಯ ಆವರಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಸನಾನ್ಯ ಯಡಿಯೂರಪ್ಪನವರ ಮೇಲೆ ಹಂಸರಾಜ್‌ ಭಾರದ್ವಾಜ್‌ ಅವರು ತನಿಖೆಗೆ ಅನುಮತಿ ನೀಡಿದಾಗ ಇದೇ ಸಿದ್ದರಾಮಯ್ಯನವರು ಯಾವ ಮಾತು ಹೇಳಿದ್ದರು? ಯಾವ ಪದಗಳನ್ನು ಬಳಸಿದ್ದರು? ಎಂದು ಕೇಳಿದರು.
4
+ ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್‌‍ನ ಸಾವಿರಾರು ಕಾರ್ಯಕರ್ತರು ಒಟ್ಟಾಗಿ ಹೆಜ್ಜೆ ಹಾಕುತ್ತಿದ್ದಾರೆ. ಪಾದಯಾತ್ರೆಯ ಹಿಂಭಾಗದಲ್ಲಿ ನೂರಾರು ಕಾರುಗಳನ್ನು ನೀವು ನೋಡುತ್ತೀರಿ. ಈ ಬಿಸಿಲಿನಲ್ಲಿ ಖಾಲಿ ಕಾರುಗಳು ಹೋದರೂ ಒಬ್ಬರೂ ತಮ ಕಾರನ್ನೇರುತ್ತಿಲ್ಲ. ಪಾದಯಾತ್ರೆಯ ಬಗ್ಗೆ ಕಾರ್ಯಕರ್ತರ ಉತ್ಸಾಹ ಇದರಿಂದ ವ್ಯಕ್ತವಾಗುತ್ತದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
5
+ ನಮಲ್ಲಿ ಕಾರ್ಯಕರ್ತರ ಮಟ್ಟದಿಂದ ರಾಷ್ಟಮಟ್ಟದವರೆಗೆ ಒಗ್ಗಟ್ಟಿದೆ ಎಂದು ತಿಳಿಸಿದರು. ಎಲ್ಲಾ ಕಡೆ ಹಾಸ್ಯಧಾರಿಗಳು, ಪಾತ್ರಧಾರಿಗಳು ಇರುತ್ತಾರೆ. ಅದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಹೇಳಿದರು. ನಮ ಒಗ್ಗಟ್ಟು ಪ್ರಾಮಾಣಿಕತೆಗೆ ಇರುವಂಥದ್ದು, ಅವರ ಒಗ್ಗಟ್ಟು ಭ್ರಷ್ಟಾಚಾರವನ್ನು ರಕ್ಷಣೆ ಮಾಡಲು ಇರುವಂಥದ್ದು. ಇದು ವ್ಯತ್ಯಾಸ ಎಂದು ವಿವರಿಸಿದರು.
6
+ ಹೆಗ್ಗಣ ಬಿದ್ದಿದೆ; ಅದನ್ನು ನೋಡಿಕೊಳ್ಳಿ.. :ಇವತ್ತು ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಎನ್ನುತ್ತಾರೆ. ಸಿದ್ದರಾಮಯ್ಯನವರಿಗೆ ತಟ್ಟೆಯ ಸೈಜ್‌ ಎಷ್ಟು ಕತ್ತೆಯ ಸೈಜ್‌ ಎಷ್ಟೆಂದು ಗೊತ್ತಾಗುವುದಿಲ್ಲ. ಯಾರ ತಟ್ಟೆಯಲ್ಲೂ ಕತ್ತೆ ಬೀಳಲು ಸಾಧ್ಯವಿಲ್ಲ. ನಿಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಎಂದು ನಾವು ಹೇಳುತ್ತೇವೆ. ಅದನ್ನು ನೀವು ನೋಡಿಕೊಳ್ಳಿ ಎಂದು ಪಿ. ರಾಜೀವ್‌ ಅವರು ವ್ಯಂಗ್ಯವಾಡಿದರು.
7
+ ರಾಜ್ಯದ ಖಜಾನೆಯಿಂದ ರಾಜ್ಯ ಸರಕಾರವು ಹಣ ಲೂಟಿ ಮಾಡಿ ಚುನಾವಣೆಗೆ ಬಳಸಿದ ಉದಾಹರಣೆ ಇತಿಹಾಸದಲ್ಲೇ ಇಲ್ಲ. ಕಾಂಗ್ರೆಸ್‌‍ ಆಡಳಿತದಲ್ಲಿ ನಡೆದ ಇದು ಇಡೀ ದೇಶಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕಿ ಎಂದು ವಿಶ್ಲೇಷಿಸಿದರು.
8
+ ಅಧಿಕಾರಿಗಳ ಆತಹತ್ಯೆ ನಿರಂತರವಾಗಿ ನಡೆಯುತ್ತಿದೆ. ಸಚಿವರು ಎಂದು ಚಂದ್ರಶೇಖರ್‌ ಅವರು ತಮ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರೂ ಕೂಡ ಸಿಐಡಿ ಚಾರ್ಜ್‌ ಶೀಟ್‌ನಲ್ಲಿ ಅವರ ಹೆಸರನ್ನು ಕೈಬಿಡುವ ಮೂಲಕ ಕಾಂಗ್ರೆಸ್‌‍ ಭ್ರಷ್ಟಾಚಾರವನ್ನು ಯಾವ ರೀತಿ ರಕ್ಷಿಸಲು ಮುಂದಾಗುತ್ತದೆ, ಯಾವ ಕೀಳು ಮಟ್ಟಕ್ಕೆ ಇಳಿಯುತ್ತದೆ ಎಂದು ಗೊತ್ತಾಗುತ್ತದೆ ಎಂದು ಹೇಳಿದರು.
9
+ ಕಿಕ್‌ ಬ್ಯಾಕ್‌ ಕೊಡಲು ಬ್ಲ್ಯಾಕ್‌ಮೇಲ್‌ :ಸಿದ್ದರಾಮಯ್ಯನವರನ್ನು ಇಳಿಸುತ್ತೇವೆ, ಇಲ್ಲವಾದರೆ ಕಿಕ್‌ಬ್ಯಾಕ್‌ ಕೊಡಿ ಎಂಬ ಬ್ಲ್ಯಾಕ್‌ಮೇಲ್‌ ತಂತ್ರಕ್ಕೆ ಕಾಂಗ್ರೆಸ್ಸಿನ ಹೈಕಮಾಂಡ್‌ ಇಳಿದಿರುವುದು ಈ ರಾಜ್ಯದ ದುರದೃಷ್ಟ. ಕರ್ನಾಟಕವು ಕಾಂಗ್ರೆಸ್ಸಿನ ಎಟಿಎಂ ಆಗಲಿದೆ ಎಂಬ ಈ ಹಿಂದಿನಿಂದಲೇ ಆಡುತ್ತಿದ್ದ ನಮ ಮಾತು ನಿಜವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್‌‍ ಜನತಾದಳ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ವಿಧಾನಪರಿಷತ್‌ ಸದಸ್ಯ ಭೋಜೇಗೌಡ, ಶಾಸಕ ಡಿ.ಸಿ.ತಮಣ್ಣ, ಮಾಜಿ ಸಂಸದ ಪುಟ್ಟಸ್ವಾಮಿ ಮುಂತಾದವರು ಇದ್ದರು.
eesanje/url_46_52_8.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯಗೆ 2ನೇ ನೋಟೀಸ್‌‍ ನೀಡಲು ಮುಂದಾದ ರಾಜ್ಯಪಾಲರು..?
2
+ ಬೆಂಗಳೂರು,ಆ.6– ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ( ಮೂಡಾ)ದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎರಡನೇ ಬಾರಿ ಮತ್ತೊಂದು ನೋಟೀಸ್‌‍ ನೀಡಲು ಮುಂದಾಗಿದ್ದಾರೆ.ಈ ಹಿಂದೆ ನೀಡಿದ್ದ ಶೋಕಾಸ್‌‍ ನೋಟಿಸ್‌‍ಗೆ ರಾಜ್ಯಸರ್ಕಾರ ನೀಡಿರುವ ಉತ್ತರ ಸಮರ್ಪಕವಾಗಿಲ್ಲ ಎಂದು ಆಕ್ಷೇಪಿಸಿರುವ ರಾಜ್ಯಪಾಲರು ಎರಡನೇ ಬಾರಿ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
3
+ ಸರ್ಕಾರದ ಪರವಾಗಿ ಮುಖ್ಯಕಾರ್ಯದರ್ಶಿಯವರು ನೀಡಿರುವ ಉತ್ತರಕ್ಕೂ, ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಹೀಗಾಗಿ ಮತ್ತೊಮೆ ಶೋಕಾಸ್‌‍ ನೋಟಿಸ್‌‍ ನೀಡುವಂತೆ ರಾಜ್ಯಪಾಲರಿಗೆ ಸ್ವತಃ ಕಾನೂನು ತಜ್ಞರೇ ಸಲಹೆ ಮಾಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.ನಿನ್ನೆ ದೆಹಲಿಯಿಂದ ಆಗಮಿಸಿದ ರಾಜ್ಯಪಾಲರು ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ನೀಡಿರುವ ಉತ್ತರದ ಬಗ್ಗೆ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದಾರೆ.
4
+ ಪ್ರಕರಣವನ್ನು ಸರ್ಕಾರ ಬಲವಾಗಿ ಸಮರ್ಥಿಸಿಕೊಂಡಿದ್ದು, ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರನ್ನು ರಕ್ಷಣೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಶೋಕಾಸ್‌‍ ನೋಟಿಸ್‌‍ ಅನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದೆ. ಹೀಗಾಗಿ ಎರಡನೇ ಬಾರಿ ನೋಟಿಸ್‌‍ ನೀಡಿ ಮುಂದಿನ ಕ್ರಮ ಜರುಗಿಸಲು ಕಾನೂನು ತಜ್ಞರು ಸಲಹೆ ಕೊಟ್ಟಿದ್ದಾರೆ.
5
+ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಪ್ರಕರಣದಲ್ಲಿ ನಡೆದದ್ದೇ ರಾಜ್ಯಪಾಲರ ಈಗಿನ ನಡೆಗೆ ಕಾರಣ ಎನ್ನಲಾಗಿದೆ. ಅಂದಿನ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ ಆದೇಶವನ್ನು ಯಡಿಯೂರಪ್ಪ ಪ್ರಶ್ನೆ ಮಾಡಿದ್ದರು. ರಾಜ್ಯಪಾಲರು ಅನುಮತಿ ಕೊಡುವಾಗ ಆರೋಪದ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಿಲ್ಲ. ಆತುರಾತುರವಾಗಿ ನಿರ್ಧಾರ ಮಾಡಿ ನೋಟೀಸ್‌‍ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದರು.
6
+ ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ರಾಜಕೀಯ ಲಾಭ ಪಡೆಯಲು ಈ ನಿರ್ಧಾರ ಮಾಡಿದ್ದರು ಎಂದು ಯಡಿಯೂರಪ್ಪ ವಾದ ಮಾಡಿದ್ದರು. ಯಡಿಯೂರಪ್ಪ ವಾದವನ್ನು ಹೈಕೋರ್ಟ್‌ ಒಪ್ಪಿತ್ತು. ಜನಪ್ರತಿನಿಧಿಗಳ ಸರ್ಕಾರದ ನೇತೃತ್ವ ವಹಿಸಿರುವವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಡುವಾಗ ಮೂರು ಬಾರಿ ನೋಟೀಸ್‌‍ ಹಾಗೂ ಮೂರು ಬಾರಿ ಲೀಗಲ್‌ ಓಪಿನಿಯನ್‌ ಪಡೆದು ಮುಂದುವರಿಯಬೇಕು ಎಂದು ಹೈಕೋರ್ಟ್‌ ಆದೇಶ ಮಾಡಿತ್ತು.
7
+ ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿ ಬಂದಿರುವುದರಿಂದ, ಕಾನೂನು ಪ್ರಕ್ರಿಯೆ ಮಾಡುವಾಗ ಯಾವುದೇ ಲೋಪ ಆಗದಂತೆ ರಾಜ್ಯಪಾಲರು ಪದೇ ಪದೆ ನೋಟೀಸ್‌‍ ನೀಡುತ್ತಿದ್ದಾರೆ.ರಾಜ್ಯಪಾಲರು ಜುಲೈ 26ಕ್ಕೆ ಮುಖ್ಯಮಂತ್ರಿಗೆ ಮುಡಾ ಸಂಬಂಧ ಶೋಕಾಸ್‌‍ ನೋಟಿಸ್‌‍ ಕಳುಹಿಸಿದ್ದರು.
8
+ ಈ ನೋಟಿಸ್‌‍ನಲ್ಲಿ, ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ 1988ರ ಸೆಕ್ಷನ್‌ 7, 9, 11, 12, ಮತ್ತು 15ರಲ್ಲಿ ಹಾಗೂ ಭಾರತೀಯ ನ್ಯಾಯ ಸಂಹಿತ 2023ರಡಿ ಸೆಕ್ಷನ್‌ 59, 61, 62, 201, 227, 228, 229, 239, 314, 316(5), 318(1)(2)(3), 319, 322, 324 (1)(2)(3), 335, 336, 338 ಮತ್ತು 340ರಲ್ಲಿ ನಿಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಕೋರಿ ಟಿ.ಜೆ.ಅಬ್ರಾಹಂ ಮನವಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ ಹಾಗೂ ಬಿಎನ್‌ಎಸ್‌‍ ಕಾಯ್ದೆಯ ವಿವಿಧ ಸೆಕ್ಷನ್‌ಗಳನ್ನು ಉಲ್ಲಂಸಿ ಮುಡಾದಲ್ಲಿ ನೀವು ಮತ್ತು ಕುಟುಂಬ ಸದಸ್ಯರು ಬದಲಿ ಪರಿಹಾರ ನಿವೇಶನಗಳನ್ನು ಪಡೆದಿರುವುದಾಗಿ ಟಿ.ಜೆ.ಅಬ್ರಾಹಂ ಆರೋಪಿಸಿದ್ದಾರೆ ಎಂದು ಉಲ್ಲೇಖಿಸಿದ್ದರು.
9
+ ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯ ಸೆಕ್ಷನ್‌ 17ಂ ಮತ್ತು 19 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತ ಕಾಯ್ದೆಯ ಸೆಕ್ಷನ್‌ 218ರಡಿಯ ನಿಯಮದಂತೆ ಅರ್ಜಿದಾರನ ಮನವಿಯ ಮೇಲೆ ಕ್ರಮ ಕೈಗೊಳ್ಳುವ ಅಗತ್ಯ ಇದೆೞ ಎಂದು ಶೋಕಾಸ್‌‍ ನೋಟಿಸ್‌‍ನಲ್ಲಿ ರಾಜ್ಯಪಾಲರು ತಿಳಿಸಿದ್ದರು.ಹೀಗಾಗಿ, ಅಭಿಯೋಜನೆಗೆ ಏಕೆ ಅನುಮತಿ ನೀಡಬಾರದು ಎಂದು ಸಕಾರಣದೊಂದಿಗೆ ಸೂಕ್ತ ದಾಖಲೆಗಳ ಸಮೇತ ನಿಮ ವಿರುದ್ಧದ ಆರೋಪಗಳ ಬಗ್ಗೆ ಏಳು ದಿನಗಳೊಳಗಾಗಿ ಸ್ಪಷ್ಟನೆ ಸಲ್ಲಿಸುವಂತೆ ರಾಜ್ಯಪಾಲರು ಸೂಚಿಸಿದ್ದರು.
10
+ ಈ ಹಿಂದೆ ರಾಜ್ಯಪಾಲರು ನೀಡಿದ ನೋಟಿಸ್‌‍ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ರಾಜ್ಯಪಾಲರ ಸಂವಿಧಾನಿಕ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ರಾಜಕೀಯ ಕಾರಣಕ್ಕಾಗಿ ಕಾನೂನುಬದ್ಧವಾಗಿ ಚುನಾಯಿತವಾದ ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಘಟಿತ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.
11
+ ದೆಹಲಿಯಿಂದ ವಾಪಸ್‌‍ ಆಗಿರುವ ರಾಜ್ಯಪಾಲರು ಇದೀಗ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಲಿದ್ದಾರೆಯೇ, ಇಲ್ಲವೇ ಅಬ್ರಹಾಂ ನೀಡಿದ ದೂರನ್ನು ತಿರಸ್ಕರಿಸಲಿದ್ದಾರೆಯೇ ಎಂಬ ಚರ್ಚೆ ಪ್ರಾರಂಭವಾಗಿದೆ.ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿದರೆ ಸರ್ಕಾರ ಹಾಗೂ ರಾಜಭವನದ ನಡುವೆ ರಾಜಕೀಯ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಸದ್ಯಕ್ಕೆ ಸದ್ಯಕ್ಕೆ ರಾಜ್ಯಪಾಲರು ಕಾದು ನೋಡಲಿದ್ದಾರೆ ಎನ್ನಲಾಗುತ್ತಿದೆ.
12
+ ದೆಹಲಿಯಲ್ಲಿ ಸಂಸತ್‌ ಅಧಿವೇಶನ ನಡೆಯುತ್ತಿದ್ದು ಆ.12 ರಂದು ಮುಕ್ತಾಯಗೊಳ್ಳಲಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದರೆ, ಸದನದಲ್ಲಿ ಪ್ರತಿಪಕ್ಷಗಳು ಕೋಲಾಹಲ ಎಬ್ಬಿಸಬಹುದು ಎಂಬ ಕಾರಣಕ್ಕೆ ಅಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಳ್ಳುವುದು ಅನುಮಾನ ಎನ್ನಲಾಗಿದೆ. ಈ ಕಾರಣಕ್ಕೆ ಆ.12ರ ಬಳಿಕ ರಾಜ್ಯಪಾಲರು ತಮ ನಿರ್ಧಾರ ಪ್ರಕಟಿ��ುವ ಸಾಧ್ಯತೆಯಿದೆ ಎನ್ನಲಾಗಿದೆ.
eesanje/url_46_52_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿದ್ದರಾಮಯ್ಯ ವಿರುದ್ಧದ ಹೋರಾಟದಲ್ಲಿ ಟಾರ್ಗೆಟ್ ಆಗ್ತಿದ್ದಾರೆ ಡಿಕೆ
2
+ ಬೆಂಗಳೂರು,ಆ.6– ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ನಡೆಸುತ್ತಿರುವ ಜಂಟಿ ಹೋರಾಟದಲ್ಲಿ ಟಾರ್ಗೆಟ್‌ ಆಗುತ್ತಿರುವವವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತ್ರ!
3
+ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಎನ್‌ಡಿಎ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರುವರೆಗೆ ನಡೆಸುತ್ತಿರುವ ಪಾದಯಾತ್ರೆ ಪ್ರಾರಂಭವಾಗಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಅಸಲಿಗೆ ಎರಡೂ ಪಕ್ಷಗಳಿಗೆ ಗುರಿಯಾಗಬೇಕಾಗಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದರೆ ಬಿಜೆಪಿ-ಜೆಡಿಎಸ್‌‍ ಗುರಿ ಡಿಸಿಎಂ ಶಿವಕುಮಾರ್‌ ಆಗುತ್ತಿದ್ದಾರೆ.
4
+ ಪಾದಯಾತ್ರೆ ಪ್ರಾರಂಭಕ್ಕೂ ಮುನ್ನವೇ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸಿದ್ದ ಶಿವಕುಮಾರ್‌ ಮುಖ್ಯವಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರನ್ನು ಗುರಿಯಾಗಿಟ್ಟುಕೊಂಡು ಕೆಂಡ ಕಾರುತ್ತಿದ್ದಾರೆ.
5
+ ಇದಕ್ಕೆ ಪ್ರತಿಯಾಗಿ ನಾವೇನು ಕಡಿಮೆ ಎಂಬಂತೆ ಕುಮಾರಸ್ವಾಮಿ, ವಿಜಯೇಂದ್ರ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಸಿದ್ದರಾಮಯ್ಯನವರನ್ನು ಬದಿಗಿರಿಸಿ, ಡಿ.ಕೆ.ಶಿವಕುಮಾರ್‌ ಅವರನ್ನು ವೈಯಕ್ತಿಕ ನೆಲಗಟ್ಟಿನಲ್ಲಿ ದಾಳಿ ನಡೆಸುತ್ತಿರುವುದು ಪಾದಯಾತ್ರೆಯ ವಿಶೇಷವಾಗಿದೆ.
6
+ ಪಾದಯಾತ್ರೆಯುದ್ದಕ್ಕೂ ಡಿ.ಕೆ.ಶಿವಕುಮಾರ್‌ ಮತ್ತು ಕುಮಾರಸ್ವಾಮಿ ಅವರುಗಳು ತಮ ಕುಟುಂಬದ ಆಸ್ತಿ ವಿಷಯವೂ ಪ್ರಸ್ತಾಪವಾಗಿದೆ. ಅದರಲ್ಲೂ ಪ್ರತಿದಿನ ಜನಾಂದೋಲನ ನಡೆಸುತ್ತಿರುವ ಡಿಕೆಶಿ ಎರಡೂ ಪಕ್ಷಗಳ ಭ್ರಷ್ಟಾಚಾರವನ್ನು ಜನತೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದಾರೆ.
7
+ ಇದಕ್ಕೆ ಪ್ರತಿಯಾಗಿ ಸೇರಿಗೆ ಸವ್ವಾ ಸೇರು ಎಂಬಂತೆ ಕುಮಾರಸ್ವಾಮಿ ಕೂಡ ಡಿಕೆಶಿಯನ್ನು ಗುರಿಯಾಗಿಟ್ಟುಕೊಂಡು ಹಿಂದೆಂದಿಗಿಂತಲೂ ಆಕ್ರಮಣಕಾರಿ ಶೈಲಿಯಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ.
8
+ ಡಿಕೆಶಿ ಭ್ರಷ್ಟಾಚಾರದ ಪಿತಾಮಹ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡದಿರುವುದೇ ಲೇಸು ಎಂದು ಬಿ.ವೈ.ವಿಜಯೇಂದ್ರ ಮಾಡಿದ ಆರೋಪವೇ ಇದಕ್ಕೆ ಮುನ್ನುಡಿ ಬರೆದಿತ್ತು.ಯಾವಾಗ ವಿಜಯೇಂದ್ರ ತಮ ಮೇಲೆ ಇಷ್ಟು ವೈಯಕ್ತಿಕ ನೆಲಗಟ್ಟಿನಲ್ಲಿ ಆರೋಪ ಮಾಡಿದರೋ ಆಗ ಕೆರಳಿ ಕೆಂಡವಾದ ಡಿಕೆಶಿಯವರು ಯಡಿಯೂರಪ್ಪ ಹಾಗೂ ವಿಜಯೇಂದ್ರರ ಜೊತೆಗೆ ಕುಮಾರಸ್ವಾಮಿ ಕುಟುಂಬದವರ ವಿರುದ್ಧ ಆರೋಪಗಳ ಸುರಿಮಳೆಗೈದರು.
9
+ ಇಡೀ ಪಾದಯಾತ್ರೆಯು ಕುಮಾರಸ್ವಾಮಿ ಹಾಗೂ ಡಿಕೆಶಿ ಅವರ ಆಸ್ತಿ ಸಮರವಾಗಿ ಮಾರ್ಪಟ್ಟಿದೆ. ನಾನು ನಿನ್ನ ಹಾಗೆ ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ ಎಂದು ಒಬ್ಬರು ಹೇಳಿದರೆ, ಮತ್ತೊಬ್ಬರು ಕನಕಪುರದ ಟೆಂಟ್‌ನಲ್ಲಿ ಸಿನಿಮಾ ತೋರಿಸಿ ಆಸ್ತಿ ಬರೆಸಿಕೊಂಡಿದ್ದೇನೆಯೇ ಎಂದು ತಿರುಗೇಟು ಕೊಡುತ್ತಿದ್ದಾರೆ.
10
+ ಯಾವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಗುರಿಯಾಗಬೇಕಾಗಿತ್ತೋ ಬದಲಿಗೆ ಇಲ್ಲಿ ಶಿವಕುಮಾರ್‌ ಎರಡೂ ಪಕ್ಷಗಳಿಗೆ ಆಹಾರವಾಗಿದ್ದಾರೆ.ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಳೆ ಮೈಸೂರು ವಿಭಾಗದ ಪ್ರಾಂತ್ಯದಲ್ಲಿ ಎನ್‌ಡಿಎ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿತ್ತು. 14 ಲೋಕಸಭಾ ಕ್ಷೇತ್ರಗಳ ಪೈಕಿ ಹಾಸನ, ಚಾಮರಾಜನಗರ ಹೊರತುಪಡಿಸಿದರೆ 12 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟ ಗೆದ್ದುಕೊಂಡಿತ್ತು.
11
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಳೆ ಮೈಸೂರು ವಿಭಾಗ ಬಹುತೇಕ ಕಾಂಗ್ರೆಸ್‌‍ಮಯವಾಗಿತ್ತು. ಜೆಡಿಎಸ್‌‍ನ ಭದ್ರಕೋಟೆಯನ್ನು ಡಿಕೆಶಿ ಯಶಸ್ವಿಯಾಗಿ ಬೇಧಿಸಿದ್ದರು.
12
+ ಯಾವಾಗ ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶ ವ್ಯತಿರಿಕ್ತವಾಗಿ ಹೊರಬಂದಿತೋ, ಅಸ್ತಿತ್ವ ಉಳಿಸಿಕೊಳ್ಳಲು ಕುಮಾರಸ್ವಾಮಿ ಮತ್ತು ಡಿಕೆಶಿ ಪೈಪೋಟಿಗೆ ಬಿದ್ದಂತೆ ವಾಕ್ಸಮರಕ್ಕೆ ನಿಂತಿದ್ದಾರೆ.ಇಬ್ಬರ ಜಗಳದಲ್ಲಿ ಸಿದ್ದರಾಮಯ್ಯ ಪ್ರಕರಣ ಗೌಣವಾಗಿದೆ. ಈ ಎಲ್ಲಾ ಆಟವನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸದ್ದಿಲ್ಲದೆ ಹಳೆ ಮೈಸೂರಿನಲ್ಲಿ ಪಕ್ಷ ಸಂಘಟನೆಯ ಬೇರುಗಳನ್ನು ಬಲಪಡಿಸಿಕೊಳ್ಳುತ್ತಿದೆ.
eesanje/url_46_53_1.txt ADDED
@@ -0,0 +1,8 @@
 
 
 
 
 
 
 
 
 
1
+ “ರೇವಣ್ಣ ಪ್ರಕರಣದಲ್ಲಿ ಇದ್ದ ಆತುರ ವಾಲ್ಮೀಕಿ ಹಗರಣದಲ್ಲಿ ಏಕಿಲ್ಲ..?”
2
+ ಬೆಂಗಳೂರು,ಆ.5-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಕುಟುಂಬ ಸದಸ್ಯರ ಮೇಲೆ ಬಂದಿ ರುವ ಆರೋಪಕ್ಕೆ ಸಂಬಂಧಿಸಿದಂತೆ ಮಾತ್ರ ಆತುರದಲ್ಲಿ ಎಸ್‌‍ಐಟಿ ರಚನೆ ಮಾಡಿ, ನೋಟೀಸ್‌‍ ನೀಡಿ, ವಿಚಾರಣೆ ಮಾಡಿ, ನ್ಯಾಯಾಂಗ ಬಂಧನಕ್ಕೂ ಕಳಿಸುತ್ತೀರಿ.
3
+ ಆದರೆ ಅದೇ ಆಸಕ್ತಿ ವಾಲೀಕಿ ನಿಗಮದ ಹಗರಣದಲ್ಲಿ ಯಾಕೆ ತೋರಿಸುತ್ತಿಲ್ಲ? ಇದು ಯಾವ ಸೀಮೆ ನ್ಯಾಯ ಸಿದ್ದರಾಮಯ್ಯನವರೇ? ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಆಶೋಕ್‌ ಪ್ರಶ್ನೆ ಮಾಡಿದ್ದಾರೆ.
4
+ ಈ ಕುರಿತು ಸಿಎಂ ಸಿದ್ದರಾಮಯ್ಯನವರಿಗೆ ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿರುವ ಆಶೋಕ್‌ ಅವರು, ಎಸ್‌‍ಐಟಿ ರಚನೆಯಾಗಿದ್ದು 31.05.2024 ರಂದು. ಆದರೆ ಎಸ್‌‍ಐಟಿ ರಚನೆಯಾಗಿ 40 ದಿನ ಕಳೆದರೂ ಮಾಜಿ ಸಚಿವ ನಾಗೇಂದ್ರ ಅವರನ್ನಾಗಲಿ, ಶಾಸಕ ಬಸವರಾಜ ದದ್ದಲ್‌ ಅವರನ್ನಾಗಲಿ ವಿಚಾರಣೆ ಮಾಡಲಿಲ್ಲ.
5
+ ವಿಚಾರಣೆ ಹೋಗಲಿ ಒಂದು ನೋಟಿಸ್‌‍ ಕೂಡಾ ಕೊಡಲಿಲ್ಲ. ಅಂದಮೇಲೆ ನಿಮಗೆ ಸತ್ಯ ಸಂಗತಿ ಹೊರಬರುವುದು ಬೇಕಾಗಿಯೇ ಇರಲಿಲ್ಲ. ಎಸ್‌‍ಐಟಿ ರಚಿಸಿದ್ದೇ ಈ ಹಗರಣ ಮುಚ್ಚಿಹಾಕಲು ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ.
6
+ ಎಸ್‌‍ಐಟಿ ನಿಮ ಕೈಗೊಂಬೆ ಎನ್ನುವುದಕ್ಕೆ ಪರಶುರಾಮ್‌ ಮತ್ತು ಪದನಾಭ್‌ ಅವರ ನಡುವೆ ನಡೆದಿರುವ ಫೋನ್ ಸಂಭಾಷಣೆಯೇ ಸಾಕ್ಷಿ. ಸಿಬಿಐ, ಇಡಿ ಆದರೆ ನಮಗೆ ಜೈಲೇ ಗತಿ, ಎಸ್‌‍ಐಟಿ ಆದರೆ ನೋಡಿಕೊಳ್ಳಬಹುದು ಎಂದು ಪದನಾಭ್‌ ಹೇಳಿರುವುದು ಸತ್ಯವಲ್ಲವೇ ಸಿದ್ದರಾಮಯ್ಯನವರೇ? ನಿಮ ಎಸ್‌‍ಐಟಿ ಎಷ್ಟು ನಿಷ್ಪಕ್ಷಪಾತಿ ಎಂದು ತಿಳಿಯಲು ಇದಕ್ಕಿಂತ ಪುರಾವೆ ಬೇಕೆ? ಎಂದು ವ್ಯಂಗ್ಯವಾಡಿದ್ದಾರೆ.
7
+ ದೇವನಹಳ್ಳಿ ಬಳಿಯ ಖಾಸಗಿ ಹೋಟೆಲ್‌ ಒಂದರಲ್ಲಿ ಮಾಜಿ ಸಚಿವ ನಾಗೇಂದ್ರ ಅವರು ನಿಗಮದ ಎಲ್ಲ ಅಧಿಕಾರಿಗಳನ್ನು ಕರೆದು, ಯಾವುದೇ ಕಾರಣಕ್ಕೂ ನನ್ನ ಹೆಸರನ್ನು ಎಲ್ಲಿಯೂ ಹೇಳಬೇಡಿ. ನಾನು ಅಧಿಕಾರದಲ್ಲಿ ಇದ್ದರೆ ಮಾತ್ರ ನಿಮನ್ನೆಲ್ಲ ಬಚಾವ್‌ ಮಾಡಲು ಸಾಧ್ಯ ಎಂದು ಎಚ್ಚರಿಕೆ ನೀಡಿದ್ದು ಸತ್ಯವಲ್ಲವೇ ಸಿದ್ದರಾಮಯ್ಯನವರೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
8
+ ಇಡಿ ಮಧ್ಯ ಪ್ರವೇಶವಾದ ನಂತರ ಕೇವಲ ನೆಪ ಮಾತ್ರಕ್ಕೆ ವಿಚಾರಣೆಯ ನಾಟಕ ಮಾಡಿದ್ದು ಸುಳ್ಳಾ ಸಿದ್ದರಾಮಯ್ಯನವರೇ? ವಿಚಾರಣೆಗೂ ಮುನ್ನ ಎಸ್‌‍ಐಟಿ ಮುಂದೆ ನೆಪ ಮಾತ್ರಕ್ಕೆ ಹೋಗಿ ಬಾ, ನಾನು ಅಧಿಕಾರಿಗಳಿಗೆ ಹೇಳಿಕೊಳ್ಳುತ್ತೇನೆ ಎಂದು ಪ್ರಭಾವಿ ನಾಯಕರೊಬ್ಬರು ನಾಗೇಂದ್ರ ಅವರಿಗೆ ಅಭಯ ಕೊಟ್ಟಿದ್ದು ಸುಳ್ಳೇ ಸಿದ್ದರಾಮಯ್ಯನವರೇ? ಎಂದು ಆಶೋಕ್‌ ಪ್ರಶ್ನೆಗಳ ಮೇಲೆ ಪ್ರಶ್ನೆ ಮಾಡಿದ್ದಾರೆ.
eesanje/url_46_53_10.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ
2
+ ಬೆಂಗಳೂರು,ಆ.5- ಯಾದಗಿರಿಯ ಪಿಎಸ್‌‍ಐ ಪರಶುರಾಮ್‌ ಸಾವಿನ ಬೆನ್ನಲ್ಲೇ ನಗರದ ಸಿಸಿಬಿ ಇನ್ಸ್ ಪೆಕ್ಟರ್‌ ಆತಹತ್ಯೆ ಮಾಡಿಕೊಂಡಿರುವ ಘಟನೆ ಕಗ್ಗಲಿಪುರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮೇಗೌಡ (54) ಆತಹತ್ಯೆ ಮಾಡಿಕೊಂಡಿರುವ ಇನ್ಸ್ ಪೆಕ್ಟರ್.
3
+ ಮೂಲತಃ ಚನ್ನಪಟ್ಟಣ ತಾಲ್ಲೂಕು ಎಲೆತೋಟದಹಳ್ಳಿ ಸಮೀಪದ ಕರ್ಲಹಳ್ಳಿ ನಿವಾಸಿಯಾದ ತಿಮೇಗೌಡ ಅವರು ಬಿಡದಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಇವರ ಕುಟುಂಬ ಮೈಸೂರಿನಲ್ಲಿ ನೆಲೆಸಿದೆ. ಈ ಹಿಂದೆ ಬಿಡದಿ ಪೊಲೀಸ್‌‍ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮೇಗೌಡ ಅವರು ಎರಡು ತಿಂಗಳ ಹಿಂದೆಯಷ್ಟೇ ಸಿಸಿಬಿಗೆ ವರ್ಗಾವಣೆಯಾಗಿದ್ದರು.
4
+ ಕುಂಬಲಗೂಡು ಸಮೀಪದ ತಗಚಗುಪ್ಪೆಯ ಜಮೀನೊಂದರಲ್ಲಿ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ತಿಮೇಗೌಡ ಅವರು ಆತಹತ್ಯೆ ಮಾಡಿಕೊಂಡಿದ್ದಾರೆ. ಇವರ ಆತಹತ್ಯೆಗೆ ಸದ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಸಮಸ್ಯೆಯಿಂದ ಆತಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
5
+
6
+ ಬಹುಶ: ರಾತ್ರಿ ಇವರು ಆತಹತ್ಯೆ ಮಾಡಿಕೊಂಡಿರಬಹುದು. ಇಂದು ಬೆಳಿಗ್ಗೆ ಈ ಮಾರ್ಗದಲ್ಲಿ ಹೋಗುತ್ತಿದ್ದ ಸಾರ್ವಜನಿಕರು ನೋಡಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.ಸುದ್ದಿ ತಿಳಿದು ಕಗ್ಗಲಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
7
+ ಈ ಬಗ್ಗೆ ಕಗ್ಗಲಿಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಯಾದಗಿರಿಯ ಪಿಎಸ್‌‍ಐ ಪರಶುರಾಮ್‌ ಅವರು ವರ್ಗಾವಣೆಯಾದ ಮಾರನೆದಿನವೇ ನಿಧನರಾಗಿದ್ದು, ಅವರ ಸಾವು ಸಂಶಯಾಸ್ಪಧವಾಗಿರುವುದರಿಂದ ಸರ್ಕಾರ ಸಿ.ಐ.ಡಿ ತನಿಖೆಗೆ ವಹಿಸಿದ್ದು, ಈಗಾಗಲೇ ಸಿ.ಐ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
eesanje/url_46_53_11.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಬಿಜೆಪಿಯ ಖಾಯಂ ಭಿನ್ನಮತೀಯ ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಟರ ಚಿಂತನೆ
2
+ ಬೆಂಗಳೂರು,ಆ.5-ಸ್ವಪಕ್ಷೀಯರ ವಿರುದ್ದವೇ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಸಾಕಷ್ಟು ಮುಜುಗರ ಸೃಷ್ಟಿಸುತ್ತಿರುವ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಬಿಜಾಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಇಲ್ಲವೇ ಶಿಸ್ತುಕ್ರಮ ಜರುಗಿಸಲು ಕೇಂದ್ರ ವರಿಷ್ಟರು ಗಂಭೀರ ಚಿಂತನೆ ನಡೆಸಿದ್ದಾರೆ.
3
+ ತಮ ವಿಭಿನ್ನ ಮಾತು, ನಡೆ-ನುಡಿ, ಹಾರ್ಡ್‌ಕೋರ್‌ ಹಿಂದುತ್ವದ ಚಿಂತನೆಗಳ ನೆಲೆಯಲ್ಲಿ ಗುರುತಿಸಿಕೊಂಡ ಯತ್ನಾಳ್‌ ಹೆಸರು ಮೂರು ದಶಕದ ರಾಜ್ಯ ರಾಜಕಾರಣದಲ್ಲಿ ಜನಜನಿತ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಮೇಲಂತೂ ಯತ್ನಾಳ್‌ ನಾಲಿಗೆ ಬಿಎಸ್‌‍ವೈ ಕುಟುಂಬದ ವಿರುದ್ಧ ಮತ್ತಷ್ಟು ಹರಿತಗೊಂಡಿದೆ. ಯಾವ ಮುಲಾಜು ಇಲ್ಲದೇ ಮನಬಂದಂತೆ ಬಿಎಸ್‌‍ವೈ ಕುಟುಂಬ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ.
4
+ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್‌‍ ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿರುವ ಸಂದರ್ಭದಲ್ಲೇ ಯತ್ನಾಳ್‌ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಬಹಿರಂಗವಾಗಿಯೇ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿರುವುದು ಸ್ವತಃ ಕಾರ್ಯಕರ್ತರಿಗೆ ಸಾಕಷ್ಟು ಇರುಸು ಮುರಿಸು ಉಂಟು ಮಾಡಿದೆ.
5
+ ಯತ್ನಾಳ್‌ ಅವರ ಹೇಳಿಕೆಗಳನ್ನು ಕಾಂಗ್ರೆಸ್‌‍ ಅಸ್ತ್ರ ಮಾಡಿಕೊಳ್ಳುತ್ತಿದ್ದು, ನಮ ವಿರುದ್ದ ಆರೋಪ ಮಾಡುತ್ತಿರುವ ನೀವು ( ಬಿಜೆಪಿಯವರು) ಮೊದಲು ನಿಮ ಪಕ್ಷದ ಹಿರಿಯ ನಾಯಕ ಯತ್ನಾಳ್‌ ಹೇಳಿಕೆಗೆ ಉತ್ತರ ಕೊಡಿ ಎಂದು ಕೈ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಇದರಿಂದಾಗಿ ಕಾರ್ಯಕರ್ತರು ಗೊಂದಲಕ್ಕೆ ಸಿಲುಕಿದ್ದು, ಅವರ ಮೇಲೆ ಏಕೆ ಶಿಸ್ತು ಕ್ರಮ ಜರಗಿಸಬಾರದು ಎಂದು ಪಕ್ಷದವರನ್ನೇ ಪ್ರಶ್ನೆ ಮಾಡುತ್ತಿದ್ದಾರೆ.
6
+ ಇದೀಗ ಯತ್ನಾಳ್‌ ಹೇಳೀಕೆಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ದೆಹಲಿ ಬಿಜೆಪಿ ನಾಯಕರು ಅವರ ಮೇಲೆ ಶಿಸ್ತು ಕ್ರಮ ಇಲ್ಲವೇ ಪಕ್ಷದಿಂದಲೇ ಉಚ್ಛಾಟನೆ ಮಾಡುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
7
+ ಮುಡಾ ಹಗರಣ ಇಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿನವರೆಗೂ ಸಿದ್ದರಾಮಯ್ಯ ಅವರ ರಾಜೀನಾಮಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವಾಗ ವಿಜಯೇಂದ್ರ ನಡೆ ಬಗ್ಗೆ ಯತ್ನಾಳ್‌ ಅನುಮಾನ ವ್ಯಕ್ತಪಡಿಸಿ, ಸ್ಫೋಟಕ ಹೇಳಿಕೆ ನೀಡಿದ್ದರು.
8
+ ವಿಜಯೇಂದ್ರ ಪಕ್ಷದ ಹಿತಾಸಕ್ತಿಗಾಗಿ ಪಾದಯಾತ್ರೆ ಮಾಡುತ್ತಿಲ್ಲ. ಡಿ.ಕೆ.ಶಿವಕುಮಾರ್‌ ಅಣತಿ ಮೇರೆಗೆ ಸಿದ್ದರಾಮಯ್ಯ ಅವರನ್ನು ಸಿಎಂ ಖುರ್ಚಿಯಿಂದ ಕೆಳಗಿಳಿಸಲು ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆೞೞ ಎಂದು ನೇರವಾಗಿ ಆರೋಪಿಸಿದ್ದರು.
9
+ ವಿಧಾನಸ��ೆಯ ಅಽವೇಶನದಲ್ಲಿ ಕೂಡ ಸ್ವಪಕ್ಷದ ನಾಯಕರಿಗೆ ಯತ್ನಾಳ್‌ ಮುಜುಗರ ಸೃಷ್ಟಿಸಿ ಮಾತನಾಡಿದ್ದರು. ವಾಲೀಕಿ, ಮುಡಾ ಹಗರಣದಲ್ಲಿ ಬಿಜೆಪಿ ಪ್ರತಿಭಟನೆ ಏನೋ ಮಾಡುತ್ತಿದೆ. ಆದರೆ ಪ್ರತಿಭಟನೆ ನಂತರ ರಾತ್ರಿ ಅಶೋಕ್‌ ಸಿದ್ದರಾಮಯ್ಯಗೆ ಕರೆ ಮಾಡಿ, ತಪ್ಪು ತಿಳ್ಕೋಬೇಡಿ ಸರ್‌, ಮೇಲಿನವರ ಒತ್ತಡ ಇತ್ತು ಅಂತಾರೆ.
10
+ ಯಾವ ಅಪ್ಪ ಮಕ್ಕಳಿಗೂ ಯಾರೂ ಅಂಜಬಾರದು, ಯಾರಿಗೂ ಅಪ್ಪಾಜಿ ಅನ್ನಬಾರದು, ನಮ ಅಪ್ಪನಿಗೆ ಮಾತ್ರ ಅಪ್ಪ ಅನ್ನಬೇಕು. ಈ ಅಪ್ಪಾಜಿ ಸಂಸ್ಕೃತಿ ನಮ ರಾಜ್ಯದಿಂದ ಹೋಗಬೇಕು ಎಂದು ಯಡಿಯೂರಪ್ಪ ಹೆಸರು ಹೇಳದೇ ಕುಟುಕಿದ್ದರು. ಈ ಹಿಂದೆ ಕೋವಿಡ್‌ ಸಂದರ್ಭದಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿ, 40 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿರುವ ಬಗ್ಗೆ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
11
+ ಬಸವರಾಜ ಬೊಮಾಯಿ ಅವರು ಮುಖ್ಯಮಂತ್ರಿಯಾದ ವೇಳೆ ಸಿಎಂ ಸ್ಥಾನಕ್ಕೆ 2,500 ಕೋಟಿ ರೂಪಾಯಿ, ಮಂತ್ರಿಸ್ಥಾನಕ್ಕೆ 100 ಕೋಟಿ ರೂಪಾಯಿ ಎಂದು ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಸೃಷ್ಟಿಸಿದ್ದರು. ಇವರ ವಿವಾದದ ಮಾತುಗಳು ಪಟ್ಟಿ ಮಾಡುತ್ತ ಹೋದರೆ ಹನುಮಂತನ ಬಾಲದಷ್ಟು ಬೆಳೆಯುತ್ತೆ. ಆದರೆ, ಯತ್ನಾಳ್‌ ಮಾಡಿರುವ ಆರೋಪಗಳಿಗೆ ಯಾವುದಕ್ಕೂ ತಾರ್ಕಿಕ ಅಂತ್ಯ ಸಿಕ್ಕಿಲ್ಲ.
12
+ ಕಳೆದ ವಿಧಾನಸಭಾ ಚುನಾವಣೆ ನಂತರ ಪ್ರತಿಪಕ್ಷ ನಾಯಕ ಇಲ್ಲವೇ ಬಿಜೆಪಿ ರಾಜ್ಯಾಧ್ಯಕ್ಷನಾಗುವ ಆಕಾಂಕ್ಷೆಯನ್ನು ಯತ್ನಾಳ್‌ ವ್ಯಕ್ತಪಡಿಸಿದ್ದರು. ಅಲ್ಲೂ ಅವರಿಗೆ ನಿರಾಸೆಯಾಯಿತು. ಆರ್‌.ಅಶೋಕ್‌ ಪ್ರತಿಪಕ್ಷ ನಾಯಕರಾದರು. ಬಿಎಸ್‌‍ವೈ ಪುತ್ರ ವಿಜಯೇಂದ್ರ ರಾಜ್ಯಾಧ್ಯಕ್ಷರಾದರು. ಬಿಎಸ್‌‍ವೈ ಕುಟುಂದ ಹಿಡಿತ ಇರೋವರೆಗೂ ತಮಗೆ ಪಕ್ಷದಲ್ಲಿ ಸ್ಥಾನಗಳು ಸಿಗುವುದಿಲ್ಲ ಎಂಬುದು ಯತ್ನಾಳ್‌ಗೆ ಮನವರಿಕೆಯಾದಂತಿದೆ. ಹೀಗಾಗಿ ಬಿಎಸ್‌‍ವೈ ಹಿಡಿತವನ್ನು ಸಡಿಲಗೊಳಿಸಲು ಅವಿರತ ಪ್ರಯತ್ನಕ್ಕೆ ಅವರು ಮುಂದಾದಂತೆ ಕಾಣುತ್ತಿದೆ.
13
+ ಇದಕ್ಕಾಗಿ ಬಿಎಸ್‌‍ವೈ ಕುಟುಂಬದ ವಿರುದ್ಧ ಒಂದಲ್ಲಾ ಒಂದು ಕಾರಣವಿಟ್ಟುಕೊಂಡು ಯತ್ನಾಳ್‌ ಯುದ್ಧ ಸಾರುತ್ತಾರೆ.ತಮ ಹೇಳಿಕೆಗಳ ಪರಿಣಾಮ ಏನಾಗಬಹುದೆಂದು ಅರಿತಿರುವ ಯತ್ನಾಳ್‌ ಪಕ್ಷದಿಂದ ಉಚ್ಛಾಟನೆ ಮಾಡಿದರೆ ಮಾಡಲಿ ಎಂಬ ನಿರ್ಧಾರಕ್ಕೆ ಬಂದಂತಿದೆ. ಶಾಸನಾತಕವಾಗಿ ಈ ಪ್ರಕ್ರಿಯೆಗೆ ಯಾವುದೇ ಮಾನ್ಯತೆಗಳಿಲ್ಲ, ಶಾಸಕತ್ವಕ್ಕೂ ಧಕ್ಕೆ ಆಗುವುದಿಲ್ಲ.
14
+ ಯಡಿಯೂರಪ್ಪ ವಿರುದ್ಧ ಮತ್ತಷ್ಟು ದಾಳಿಗೆ ಪರವಾನಗಿ ಸಿಕ್ಕಂತಾಗುತ್ತದೆ. ಈ ಹೋರಾಟವನ್ನು ಜೀವಂತವಾಗಿಟ್ಟುಕೊಂಡು ತಮದೇ ಸಮುದಾಯವಾದ ಪಂಚಮಸಾಲಿ ಲಿಂಗಾಯಿತರ ಪ್ರಶ್ನಾತೀತ ನಾಯಕನಾಗಿ ಹೊರ ಹೊಮುವುದು ಆ ಮೂಲಕ ಯಡಿಯೂರಪ್ಪ ಲಿಂಗಾಯಿತರ ಪ್ರಶ್ನಾತೀತ ನಾಯಕರಲ್ಲ ಎಂಬುದನ್ನು ಬಿಜೆಪಿ ನಾಯಕತ್ವಕ್ಕೆ ಮನದಟ್ಟು ಮಾಡಿಕೊಡುವುದು ಅವರ ಸದ್ಯದ ತಂತ್ರ.
15
+ ಇದನ್ನು ಅರಿತಿರುವ ಯಡಿಯೂರಪ್ಪ, ಇದೇ ಸಮುದಾಯಕ್ಕೆ ಸೇರಿದ ಅರವಿಂದ ಬೆಲ್ಲದ ಅವರನ��ನು ವಿಧಾನಸಭೆಯ ಪ್ರತಿಪಕ್ಷದ ಉಪ ನಾಯಕನ ಸ್ಥಾನಕ್ಕೆ ನೇಮಕವಾಗುವಂತೆ ನೋಡಿಕೊಳ್ಳುವ ಮೂಲಕ ಇಡೀ ಸಮುದಾಯದ ಬೆಂಬಲ ಯತ್ನಾಳ್‌ಗೆ ಇಲ್ಲ ಎಂಬುದನ್ನು ಸಾಬೀತು ಪಡಿಸುವ ತಂತ್ರಕ್ಕೆ ಶರಣಾಗಿದ್ದಾರೆ. ಕೋವಿಡ್‌ ಹಗರಣದ ಕುರಿತು ಮಾಡಿರುವ ಆರೋಪಗಳ ಮೂಲಕ ಕಾಂಗ್ರೆಸ್‌‍ ನಾಯಕರ ಕೈಗೆ ಯತ್ನಾಳ್‌ ತಾವಾಗೇ ಅಸ ಕೊಟ್ಟಿದ್ದಾರೆ.
16
+ ಪಕ್ಷೀಯ ನಾಯಕರ ವಿರುದ್ಧವೇ ಬಂಡಾಯ ಸಾರಿರುವ ಅವರಿಗೆ ದಿಲ್ಲಿ ಬಿಜೆಪಿ ಅಂಗಳದಲ್ಲಿರುವ ರಾಜ್ಯದ ಕೆಲವು ಬಿಜೆಪಿ ನಾಯಕರ ಬೆಂಬಲ ಇದೆ. ಅವರಿಗೂ ರಾಜ್ಯದಲ್ಲಿ ತಮ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಸದ್ಯಕ್ಕೆ ಈ ಗೊಂದಲಗಳು ಬಗೆಹರಿಯುವ ಸೂಚನೆಗಳು ಇಲ್ಲ.
eesanje/url_46_53_12.txt ADDED
@@ -0,0 +1,8 @@
 
 
 
 
 
 
 
 
 
1
+ ರಾಷ್ಟ್ರಧ್ವಜ ಮಾರಾಟ-ತಯಾರಿಕೆಗೆ ಪೆಟ್ಟು ಕೊಟ್ಟ ಹವಾಮಾನ ವೈಪರೀತ್ಯ, ಭಾರೀ ಮಳೆ
2
+ ಕಲೇಶ ಮಂಡ್ಯಾಳಹುಬ್ಬಳ್ಳಿ,ಆ.5-ಉತ್ತರ ಕರ್ನಾಟಕ ಬಾಗದಲ್ಲಿ ಭಾರೀ ಮಳೆ ಹಾಗೂ ತಂಪಾದ ಗಾಳಿ ಬೀಸುವುದರಿಂದ ರಾಷ್ಟ್ರಧ್ವಜ ಮಾರಾಟಗಾರರ ಹಾಗೂ ತಯಾರಿಕೆಗೆ ದೊಡ್ಡ ಪ್ರಮಾಣದ ಹೊಡೆತ ಬಿದ್ದಿದೆ. ಕಳೆದ ವರ್ಷ ಸ್ವಾತಂತೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದಾಖಲೆಯ ವಹಿವಾಟು ನಡೆದಿತ್ತು. ಪ್ರತಿ ವರ್ಷ ಒಂದೂವರೆ ಕೋಟಿ ರೂಪಾಯಿಗೂ ಹೆಚ್ಚು ವಹಿವಾಟು ನಡೆಯುತ್ತದೆ. ಆದರೆ, ಈ ಸಲ ಜುಲೈ ವರೆಗೆ 97 ಲಕ್ಷ ಮೊತ್ತದ ವಹಿವಾಟು ಮಾತ್ರ ನಡೆದಿದೆ.
3
+ ಭಾರತೀಯ ಮಾನಕ ಸಂಸ್ಥೆ ಪ್ರಕಾರ 9 ವಿವಿಧ ಅಳತೆಯ ಧ್ವಜಗಳನ್ನು ಸಿದ್ಧಪಡಿಸಲಾಗುತ್ತದೆ. 21×14, 128, 9×6, 6×4, 4.5×3, 3×2, 1.5 1,9×6 5 6×4 ಅಳತೆಯ ಧ್ವಜಗಳನ್ನು ಸಿದ್ಧಪಡಿಸಿ, ಮಾರುತ್ತೇವೆ. ಅಳತೆಗೆ ತಕ್ಕಂತೆ 250 ರಿಂದ 30 ಸಾವಿರವರೆಗೆ ದರವಿದೆ. ಹುಬ್ಬಳ್ಳಿಯ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಉತ್ಪಾದನೆಯಾಗುವ ಖಾದಿ ಅಂಗಿ, ಪ್ಯಾಂಟ್‌‍, ಟವೆಲ್‌‍, ಕರವಸ, ಟೊಪ್ಪಿಗೆ, ಜಮಖಾನಿಯಂತಹ ವಸ್ತುಗಳಿಗೂ ಬೇಡಿಕೆ ತಗ್ಗಿದೆ. ನಗರ ಪ್ರದೇಶ ಮತ್ತು ಖಾದಿ ಬಗೆಗೆ ತಿಳಿದವರು ಮಾತ್ರ ಖರೀದಿಸುತ್ತಾರೆ.
4
+ ವೀವಿಂಗ್‌, ಸ್ಪಿನ್ನಿಂಗ್‌ ಕೆಲಸಕ್ಕೆ ಸಿಬ್ಬಂದಿ ಬೇಕು. ಆದರೆ, ಕೆಲಸಕ್ಕೆ ಜನ ಬರುತ್ತಿಲ್ಲ. ಬಾಗಲಕೋಟೆ, ಬಾದಾಮಿ, ಬೀಳಗಿಯಲ್ಲಿ 21 ಹಳ್ಳಿಗಳಲ್ಲಿ ಸಂಘದ ಕಚೇರಿಗಳಿವೆ. ಧ್ವಜ ಉತ್ಪಾದನೆಗೆ ಬಳಸುವ ಕೆಲ ಕಚ್ಚಾ ಸಾಮಗ್ರಿಗಳ ಮೇಲಿನ ಜಿಎಸ್ಟಿಯಿಂದ ಆರ್ಥಿಕ ಹೊರೆ ಹೆಚ್ಚಿದೆ. ಆಯಾ ವಸ್ತುಗಳ ಮೇಲೆ ತೆರಿಗೆ ಮುಕ್ತಗೊಳಿಸಿದರೆ ಅನುಕೂಲಕರ.
5
+ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ಗರಗ ಕೇಂದ್ರಕ್ಕೆ 2023ರ ಜುಲೈ 23ರಿಂದ 2/3 ಅಳತೆಯ ಧ್ವಜ ತಯಾರಿಕೆಗೆ ಅನುಮತಿ ಸಿಕ್ಕಿದ್ದು, ಈವರೆಗೆ ಅಂದಾಜು 10 ಲಕ್ಷ ವಹಿವಾಟು ಆಗಿದೆ. ಅಲ್ಲಿಯೂ ಹವಾಮಾನ ವೈಪರೀತ್ಯ, ಕಚ್ಚಾ ಸಾಮಗ್ರಿ ಪೂರೈಕೆ ಮತ್ತು ಸಿಬ್ಬಂದಿ ಕೊರತೆಯಿಂದ ಉತ್ಪಾದನೆಗೆ ಸಮಸ್ಯೆಯಾಗಿದೆ.ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ತಂಪಾಗಿ ನೂಲು, ಬಟ್ಟೆಗೆ ಹಾಕಿದ್ದ ಮಸಿ ಒಣಗುತ್ತಿಲ್ಲ. ಇದರಿಂದ ಉತ್ಪಾದನೆ ನಿಧಾನವಾಗಿದೆ.
6
+ ಶಕ್ತಿ ಪರಿಣಾಮ:
7
+ ಕೌಶಲ ಆಧಾರಿತ ಸಿಬ್ಬಂದಿಯ ಅಗತ್ಯವಿದೆ. ಆದರೆ ಇಲ್ಲಿ ಸಿಬ್ಬಂದಿಗೆ ಸಿಗುವ ಸಂಬಳವೂ ಕಡಿಮೆ. ದಿನಕ್ಕೆ ಅಂದಾಜು 230 ರಿಂದ 250 ಸಿಗಬಹುದು. ಅದಕ್ಕೆ ಕೆಲಸಕ್ಕೆ ಬರಲು ಜನರು ಜನ ಹಿಂದೇಟು ಹಾಕುತ್ತಾರೆ. ಮಹಿಳೆಯರು ಶಕ್ತಿ ಯೋಜನೆಯಡಿ ಕೆಲಸಕ್ಕೆಂದು ಪರ ಊರುಗಳಿಗೆ ಹೋಗುತ್ತಾರೆ. ಇಲ್ಲಿ ಕೆಲಸಕ್ಕೆ ಬರುವವರು ಇಲ್ಲದಂತಾಗಿದೆ ಎಂದರು.
8
+ ಪ್ಲಾಸ್ಟಿಕ್‌ ಸಿಂಥೆಟಿಕ್‌ ಧ್ವಜಗಳ ತಯಾರಿಕೆ ನಿಲ್ಲಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ರಾಷ್ಟ್ರಧ್ವಜದ ಬಗ್ಗೆ ಗೌರವ ಮೂಡಿಸುವ ಪಠ್ಯವನ್ನು 5ನೇ ತರಗತಿಯಿಂದ ಪಿಯುಸಿವರೆಗೆ ಅಳವಡಿಸಬೇಕು ಎಂಬುದು ಸಹ ಜನರ ಒತ್ತಾಯ ಆಗಿದೆ.
eesanje/url_46_53_2.txt ADDED
@@ -0,0 +1,7 @@
 
 
 
 
 
 
 
 
1
+ ನಿಮ್ಮ ಸಹೋದರರ ಆಸ್ತಿ ಬಹಿರಂಗ ಪಡಿಸಿ : ಹೆಚ್ಡಿಕೆಗೆ ಡಿಕೆಶಿ ಚಾಲೆಂಜ್
2
+ ಬೆಂಗಳೂರು,ಆ.5-ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ತಮ್ಮ ಸಹೋದರರ ಆಸ್ತಿಯ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಲಿ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ನನ್ನ ಆಸ್ತಿಯ ಹಿನ್ನಲೆಯನ್ನು ಪ್ರಸ್ತಾಪ ಮಾಡಿ ಪ್ರಶ್ನೆ ಕೇಳಿದ್ದಾರೆ. ಅವರಿಗೆ ಅಧಿಕಾರ ಇದೆ. ಮಾಹಿತಿ ಕೇಳಲಿ. ನನ್ನ ಕುಟುಂಬದ ಸದಸ್ಯರ ಆಸ್ತಿಪಟ್ಟಿ ಕೇಳಿದ್ದಾರೆ.
4
+ ಎಲ್ಲವನ್ನೂ ಕೊಡಲು ನಾನು ಸಿದ್ಧ. ಯಾವುದೇ ಮುಚ್ಚುಮರೆ ಇಲ್ಲ. ಆದರೆ ಅದಕ್ಕೂ ಮೊದಲು ಕುಮಾರಸ್ವಾಮಿ ಅವರ ಸಹೋದರರ ಆಸ್ತಿಯ ಲೆಕ್ಕ ಕೊಡಲಿ ಎಂದು ಹೇಳಿದ್ದಾರೆ.
5
+ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಸಹೋದರ ಯಾವ ರೀತಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಲೆಕ್ಕಾಚಾರ ಆಗಬೇಕಿದೆ. ಕುಮಾರಸ್ವಾಮಿಯ ಹಗರಣಗಳಿಗೆ ಉತ್ತರ ಕೊಡುವಂತೆ ನಾವು ಜನಾಂದೋಲನ ಸಮಾವೇಶ ನಡೆಸಿ ಪ್ರಶ್ನೆ ಕೇಳುತ್ತಿದ್ದೇವೆ. ಅದಕ್ಕೆ ಈವರೆಗೂ ಉತ್ತರ ಕೊಟ್ಟಿಲ್ಲ. ಕುಮಾರಸ್ವಾಮಿ ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದರು.
6
+ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರದ ಪಿತಾಮಹ ಎಂದು ಹೇಳಿದ್ದಾರೆ. ಅವರ ಅಪ್ಪನನ್ನು ಏಕೆ ಜೈಲಿಗೆ ಕಳುಹಿಸಿದ್ದರು?, ರಾಜೀನಾಮೆ ಏಕೆ ಕೊಡಿಸಿದ್ದರು? ಎಂಬುದರ ಬಗ್ಗೆ ಪಿತಾಮಹ ವಿಜಯೇಂದ್ರ ಮೊದಲು ಉತ್ತರ ಹೇಳಲಿ.
7
+ ನಂತರ ಅವರದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಗೂಳಿಹಟ್ಟಿ ಶೇಖರ್‌ ಕೇಳುತ್ತಿರುವ ಪ್ರಶ್ನೆಗಳಿಗೆ ಇಂದು ಚನ್ನಪಟ್ಟಣದ ಪಾದಯಾತ್ರೆಯಲ್ಲಿ ಉತ್ತರ ಕೊಡಲಿ ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಏಕೆ ಹಣ ಬಿಡುಗಡೆ ಮಾಡಿಸಲಿಲ್ಲ ಎಂಬುದಕ್ಕೆ ಸ್ಪಷ್ಟನೆ ನೀಡಬೇಕಿದೆ. ಈ ನಿಟ್ಟಿನಲ್ಲಿ ನಾವು ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರ ಕೊಡಲಿ ಎಂದು ಅವರು ಆಗ್ರಹಿಸಿದರು.
eesanje/url_46_53_3.txt ADDED
@@ -0,0 +1,7 @@
 
 
 
 
 
 
 
 
1
+ ರಾಮೇಶ್ವರ ಕೆಫೆಗೆ ಆರೋಪಿಯನ್ನು ಕರೆತಂದು ದೃಶ್ಯ ಮರುಸೃಷ್ಠಿಸಿದ ಎನ್ಐಎ
2
+ ಬೆಂಗಳೂರು,ಆ.5-ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನಗರದ ಐಟಿಪಿಎಲ್‌ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಗೆ ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಪ್ರಮುಖ ಆರೋಪಿ ಮುಸಾವಿರ್‌ನನ್ನು ಸ್ಥಳಕ್ಕೆ ಕರೆತಂದು ಅಂದಿನ ಘಟನೆಯನ್ನು ಮರುಸೃಷ್ಟಿಸಿ ಮಹಜರು ನಡೆಸಿದರು.
3
+ ರಾಮೇಶ್ವರಂ ಕೆಫೆಯನ್ನು ಸ್ಫೋಟಿಸಲು ಮಾ.1ರಂದು ಆರೋಪಿ ಬಂದಿದ್ದ ರೀತಿಯಲ್ಲೇ ಇಂದು ಬೆಳಿಗ್ಗೆ ಕೆಫೆಗೆ ಟೋಫಿ ಧರಿಸಿ ಕೆಫೆಗೆ ಯಾವ ಮಾರ್ಗದಲ್ಲಿ ಬಂದ, ಎಷ್ಟು ನಿಮಿಷ ಕಫೆಯಲ್ಲಿ ಕುಳಿತಿದ್ದ, ಯಾವ ತಿಂಡಿ ಆರ್ಡರ್‌ ಮಾಡಿದ್ದ, ಕೆಫೆಯಲ್ಲಿ ಇದ್ದಷ್ಟು ಸಮಯ ಏನು ಮಾಡುತ್ತಿದ್ದ ನಂತರ ಹೊರಗೆ ಹೋಗುವಾಗ ತಾನು ತಂದಿದ್ದ ಸ್ಫೋಟಕಗಳಿದ್ದ ಬ್ಯಾಗನ್ನು ಯಾವ ಸ್ಥಳದಲ್ಲಿ ಇರಿಸಿದ್ದ ಎಂಬ ಅಂದಿನ ಘಟನಾವಳಿಗಳನ್ನು ಆರೋಪಿಯಿಂದಲೇ ಮರುಸೃಷ್ಠಿಸಿ ಎನ್‌ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿ ಹಲವು ಮಾಹಿತಿಗಳನ್ನು ಸಂಗ್ರಹಿಸಿದರು.
4
+ ಎನ್ಐಎ ಅಧಿಕಾರಿಗಳು 2-3 ಬಾರಿ ಅಂದಿನ ದೃಶ್ಯಗಳನ್ನು ಮರುಸೃಷ್ಠಿ ಮಾಡಿದ್ದಾರೆ. ಆರೋಪಿ ಮುಸಾವಿರ್‌ ಅಂದು ಹೇಗೆ ಕೆಫೆಗೆ ನಡೆದುಕೊಂಡು ಬಂದಿದ್ದನ್ನು ತೋರಿಸಿ ಅಧಿಕಾರಿಗಳಿಗೆ ವಿವರಣೆ ನೀಡಿದ್ದಾನೆ. ಬಾಂಬ್‌ ಇಟ್ಟಿದ್ದ ಸ್ಥಳ, ಕುಳಿತಿದ್ದ ಸ್ಥಳವನ್ನು ತೋರಿಸಿದ್ದಾನೆ. ಈ ಎಲ್ಲಾ ದೃಶ್ಯಾವಳಿಗಳನ್ನು ಅಧಿಕಾರಿಗಳು ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾರೆ.
5
+ ಈ ಸಂದರ್ಭದಲ್ಲಿ ಕೆಫೆ ಸುತ್ತಮುತ್ತಲೂ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿತ್ತು. ವೈಟ್‌ ಫೀಲ್ಡ್ ವಿಭಾಗದ 50ಕ್ಕೂ ಹೆಚ್ಚು ಅಧಿಕ ಪೊಲೀಸ್‌‍ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಮಾ.1ರಂದು ನಡೆದಿದ್ದ ಕೆಫೆ ಸ್ಫೋಟದಲ್ಲಿ ಕೆಫೆ ಸಿಬ್ಬಂದಿ ಸೇರಿ 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಅಂದಿನ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು.
6
+ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಇದು ಉಗ್ರರ ಸಂಚಿರಬಹುದೆಂದು ಶಂಕೆ ವ್ಯಕ್ತಪಡಿಸಿ ಅಂದಿನಿಂದ ಹಲವು ಮಾಹಿತಿಗಳನ್ನು ಸಂಗ್ರಹಿಸಿದಾಗ, ಈ ಪ್ರಕರಣದ ಮಾಸ್ಟರ್‌ ಮೈಂಡ್‌ ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್‌ತಾಹ ಹಾಗೂ ಮುಸಾವಿರ್‌ ಹುಸೇನ್‌ ಎಂಬುದು ಗೊತ್ತಾಯಿತು.
7
+ ಆರೋಪಿಗಳ ಜಾಡು ಹಿಡಿದು ಹೊರಟ ಎನ್‌ಐಎ ತಂಡ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ಏ.12ರಂದು ಬಂಧಿಸಿ ನಗರಕ್ಕೆ ಕರೆತಂದು ಹೆಚ್ಚಿನ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಸಂಗ್ರಹಿಸಿತ್ತು.
eesanje/url_46_53_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಿಎಂ ಹೇಳಿದ್ದೇನು..?
2
+ ಬೆಂಗಳೂರು,ಆ.5-ಮುಂದಿನ ವಾರ ಮತ್ತಷ್ಟು ಮಳೆಯಾಗುವ ಮುನ್ಸೂಚನೆಯಿದ್ದು, ಎಚ್ಚರಿಕೆ ವಹಿಸಲು ಹಲವು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಹಾನಿ ಕುರಿತು ಇಂದು ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
3
+ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ಕಾಲಾವಧಿಯಲ್ಲಿ ಪೂರ್ಣ ಮನೆ ಹಾಳಾಗಿದ್ದರೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ನಿರ್ಣಯ ಮಾಡಲಾಗಿದ್ದು, ಅದು ದುರುಪಯೋಗವಾಗಿತ್ತು ಮತ್ತು ಎಲ್ಲರಿಗೂ ಪರಿಹಾರ ಸಿಗಲಿಲ್ಲ . ಮೊದಲ ಎರಡು ಕಂತುಗಳ ಹಣ ಬಿಡುಗಡೆಯಾದರೆ ಮೂರನೇ ಕಂತಿನ ಹಣ ಬಿಡುಗಡೆಯಾಗಲಿಲ್ಲ ಎಂದರು.
4
+ ಈಗ ನಮ ಸರ್ಕಾರ ಪೂರ್ಣ ಮನೆ ಹಾನಿಯಾಗಿದ್ದರೆ, 1,20,000 ರೂ. ಪರಿಹಾರದ ಜೊತೆಗೆ ಮನೆಯನ್ನು ಕಟ್ಟಿಸಿಕೊಡುತ್ತೇವೆ ಎಂದು ಹೇಳಿದರು.ರಾಜ್ಯದಲ್ಲಿ ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಾಗಿರುವ ಮಳೆಹಾನಿಯನ್ನು ಪರಿಶೀಲನೆ ನಡೆಸಲಾಗಿದೆ.
5
+ ಮನೆ ಬಿದ್ದು ಹೋಗಿರುವುದು, ಜೀವಹಾನಿ, ವಿದ್ಯುತ್ ಕಂಬ ಬಿದ್ದಿರುವುದು, ವಿದ್ಯುತ್ತ ಕಂಬಗಳ ದುರಸ್ತಿ ಸೇರಿದಂತೆ ಹಲವು ರೀತಿಯ ಪರಿಹಾರ ಕಾರ್ಯಗಳನ್ನು ಆರಂಭಿಸಲಾಗಿದೆ ಎಂದರು.40 ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ. ಅಂಗನವಾಡಿಗೆ ರಜೆ ಘೋಷಿಸಲಾಗಿದೆ. ಶಾಲೆಗಳಲ್ಲಿ ಹತ್ತು ದಿನ ರಜೆ ನೀಡಿದ್ದು, ಅಗತ್ಯವಾದರೆ ಮತ್ತುಷ್ಟು ದಿನ ರಜೆ ನೀಡಲಾಗುವುದು ಎಂದು ಹೇಳಿದರು.
6
+ ಮುಂದಿನ ವಾರ ಮಳೆ ಹೆಚ್ಚಾಗುವುದರಿಂದ ಕಂದಾಯ, ಅರಣ್ಯ, ಜಲಸಂಪನೂಲ, ಇಂಧನ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.
7
+ ಖಾನಾಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪದೇ ಪದೇ ಹಳ್ಳಿಗಳು ಮುಳುಗಡೆಯಾಗುತ್ತಿರುವುದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ನಮ ಸರ್ಕಾರ ಬಧ್ಧವಾಗಿದೆ. ಜನರೂ ಕೂಡ ಇದಕ್ಕೆ ಸಹಕರಿಸಬೇಕು. ಪುನರ್ ವಸತಿಗಾಗಿ ನಿರ್ಮಿಸಲಾದ ಸ್ಥಳಗಳಿಗೆ ಮುಳುಗಡೆಯ ಪ್ರದೇಶದ ಜನ ಸ್ಥಳಾಂತರಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
8
+ ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ :ಗೃಹಲಕ್ಷ್ಮಿ ಯೋಜನೆಯಡಿ ಮೇವರೆಗೂ ಮಹಿಳೆಯರಿಗೆ ತಲಾ 2 ಸಾವಿರ ರೂ. ಹಣ ಪಾವತಿಸಲಾಗಿದೆ. ಜೂನ್ ತಿಂಗಳಿನಿಂದ ಬಾಕಿ ಇದೆ. ಅದನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು.
9
+ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದರೆ. ತಮ ವಿರುದ್ಧ ನೀಡಿರುವ ದೂರನ್ನು ತಿರಸ್ಕರಿಸುವಂತೆ ಈಗಾಗಲೇ ಸಂಪುಟದ ನಿರ್ಧಾರವನ್ನು ರಾಜ್ಯಪಾಲರಿಗೆ ತಿಳಿಸಲಾಗಿದೆ. ರಾಜ್ಯಪಾಲರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾದುನೋಡುತ್ತೇವೆ. ಈವರೆಗೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಹೇಳಿದರು.
10
+ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜಕೀಯ ಹಾಗೂ ಕಾನೂನಾತಕವಾಗಿ ಹೋರಅಟ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
eesanje/url_46_53_5.txt ADDED
@@ -0,0 +1,5 @@
 
 
 
 
 
 
1
+ ವೈಫಲ್ಯ ಮುಚ್ಚಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ : ಸಚಿವ ಕೃಷ್ಣ ಬೈರೇಗೌಡ
2
+ ಬೆಂಗಳೂರು,ಆ.5– ಜೆಡಿಎಸ್- ಬಿಜೆಪಿ ಪಕ್ಷಗಳು ತಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಪಾದಯಾತ್ರೆ ನಡೆಸಿ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ನೆರೆ ಹಾವಳಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಇವರ ವೈಲ್ಯ ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯುವ ಯತ್ನ ಮಾಡುತ್ತಿದ್ದಾರೆ.
3
+ ಕುಮಾರಸ್ವಾಮಿಯವರು ನಮ ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲಿ ಸಾಕು ನಾನು ಅವರ ಕೈಮುಗಿಯುತ್ತೇನೆ ಎಂದರು.
4
+ ಬಿಜೆಪಿ-ಜೆಡಿಎಸ್ ಒಟ್ಟಾಗಿ ಆಪರೇಷನ್ ಮಾಡಿ ಜನರಿಂದ ಆಯ್ಕೆಯಾದ ಸರ್ಕಾರವನ್ನು ಬೀಳಿಸೋ ಪುರುಷಾರ್ಥಕ್ಕೆ ಜನ ಇವರನ್ನು ಆಯ್ಕೆ ಮಾಡಿ ಕಳಿಸಿರೋದು, ಸರ್ಕಾರ ಬೀಳಿಸೋದನ್ನೇ ಇವರು ರಾಜ್ಯದ ಅಭಿವೃದ್ಧಿ ಎಂದು ತಿಳಿದಿರುವ ಹಾಗಿದೆ ಎಂದು ಹೇಳಿದರು.
5
+ ಸರ್ಕಾರ ಬೀಳಿಸೋದು ಇರಲಿ, ಕೇಂದ್ರದಿಂದ ಯಾವೆಲ್ಲಾ ಯೋಜನೆಯನ್ನ ಇವರು ರಾಜ್ಯಕ್ಕೆ ತಂದಿದ್ದಾರೆ? ಇವರಿಂದ ರಾಜ್ಯಕ್ಕೆ ಕೊಡುಗೆ ಏನು? ಮೊದಲು ತಿಳಿಸಲಿ, ಆಪರೇಷನ್ ಕಮಲ ಮಾಡುವುದೇ ದೊಡ್ಡ ಕೊಡುಗೆಯಾ? ಎಂದು ಪ್ರಶ್ನಿಸಿದರು.
eesanje/url_46_53_6.txt ADDED
@@ -0,0 +1,7 @@
 
 
 
 
 
 
 
 
1
+ ಕಾಂಗ್ರೆಸ್‌‍ ಸರ್ಕಾರದ ಪತನದ ಸಮಯ ಸಮೀಸುತ್ತಿದೆ : ಹೆಚ್‌ಡಿಕೆ ಭವಿಷ್ಯ
2
+ ಬೆಂಗಳೂರು, ಆ.5-ರಾಜ್ಯ ಕಾಂಗ್ರೆಸ್‌‍ ಸರ್ಕಾರ ಪತನವಾಗುವ ಸಮಯ ಹತ್ತಿರವಾಗಿದೆ ಎಂದು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾಸ್ವಾಮಿ ಭವಿಷ್ಯ ನುಡಿದಿದ್ದಾರೆ.
3
+ ಬಿಜೆಪಿ-ಜೆಡಿಎಸ್‌‍ ಹಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನವಾದ ಇಂದು ಕೆಂಗಲ್‌ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.
4
+ ರಾಜ್ಯಕಾಂಗ್ರೆಸ್‌‍ ಸರ್ಕಾರದ ಪಾಪದ ಕೊಡ ತುಂಬಿದ್ದು, ಪತನಗೊಳ್ಳುವ ಕಾಲ ಸಮೀಪಿಸುತ್ತಿದೆ. ಅಧಿಕಾರ ಮಾಡಲು ಕಾಂಗ್ರೆಸ್‌‍ನವರಿಗೆ ಯೋಗ್ಯತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.
5
+ ರಾಜ್ಯದ ಉಪಮುಖ್ಯಮಂತ್ರಿಯಾಗಿ ಜನರ ಸಮಸ್ಯೆ ಬಗೆಹರಿಸುವುದು ಬಿಟ್ಟು ನನ್ನನ್ನು ಗುಣಗಾನ ಮಾಡಿಕೊಂಡು ಕೂತಿದ್ದಾರೆ. ಮಾತನಾಡಲು ಶಕ್ತಿ ಇಲ್ಲದ ಹುಚ್ಚರಂತೆ ಪದ ಬಳಕೆ ಮಾಡಿಕೊಂಡು ಹೋಗುತ್ತಿದ್ದಾರೆ. ನನ್ನ ಹತ್ತಿರ ಇರುವ ದಾಖಲೆ ತೆಗೆದರೆ ಈ ವ್ಯಕ್ತಿ ಮಾಡಿರುವ ಅವ್ಯವಹಾರದ ಸಂಪುಟವನ್ನೇ ಮಾಡಬಹುದು. ಏನೇನು ಕಟ್ಟಿಕೊಂದ್ದಾರೋ ಎಲ್ಲವನ್ನು ಬಿಚ್ಚಲಿ. ನಿಮ ಗೊಡ್ಡು ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ.
6
+ ಪ್ರಾಯಶ್ಚಿತ ಮಾಡಿಕೊಳ್ಳಬೇಕಾಗಿದ್ದು ಡಿ.ಕೆ. ಶಿವಕುಮಾರ್‌ ಎಂದಿರುವ ಅವರು, ತಪ್ಪು ಮಾಡಿಕೊಂಡು ಪ್ರಾಯಶ್ಚಿತ ಮಾಡಿಕೊಳ್ಳುವುದಿಲ್ಲ ಎಂಬ ಬಂಡ ಮಾತನಾಡುತ್ತಾರೆ. ಶಿವಕುಮಾರ್‌ ಮಾತಿಗೆ ಯಾರು ಗೌರವ ಕೊಡುತ್ತಿಲ್ಲ. ನಾವು ಮಾತನಾಡಿದರೆ ಆ ಮನುಷ್ಯನಿಗೆ ಏನಾಯಿತು. ಈಗಿನ ಪರಿಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
7
+ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪರ ಅವರನ್ನು ನಾನು ಜೈಲಿಗೆ ಕಳಿಸಿಲ್ಲ. ಅವತ್ತಿನ ಸಂದರ್ಭದಲ್ಲಿ ವಿಚಾರ ಹಾಗಿತ್ತು ಎಂದು ಹೇಳಿದ್ದಾರೆ.ಹೆಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಶಾಸಕರಾದ ಸಿ.ಬಿ.ಸುರೇಶ್‌ ಬಾಬು, ಜಿ.ಟಿ.ಹರೀಶ್‌ಗೌಡ, ಮಾಜಿ ಶಾಸಕರಾದ ಡಾ.ಅನ್ನದಾನಿ, ಸಾ.ರಾ.ಮಹೇಶ್‌, ಮಂಜುನಾಥ್‌, ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
eesanje/url_46_53_7.txt ADDED
@@ -0,0 +1,7 @@
 
 
 
 
 
 
 
 
1
+ ರಾಜ್ಯದಲ್ಲಿ ತಗ್ಗಿದ ವರುಣನ ಆರ್ಭಟ, ಸದ್ಯಕ್ಕೆ ಭಾರೀ ಮಳೆ ಮುನ್ಸೂಚನೆಗಳಿಲ್ಲ
2
+ ಬೆಂಗಳೂರು, ಆ.5-ಕರಾವಳಿ ಹಾಗೂ ಮಲೆನಾಡಿನಲ್ಲಿ ಆರ್ಭಟಿಸುತ್ತಿದ್ದ ವರುಣ ಸೌಮ್ಯವಾಗಿರುವ ಹಿನ್ನಲೆಯಲ್ಲ ಮಳೆ ಕಡಿಮೆಯಾಗಿದೆ. ಸದ್ಯಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ಆದರೂ ರಾಜ್ಯಾದ್ಯಂತ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.
3
+ ಆಗಸ್ಟ್‌ ಒಂದರಿಂದ ಇದುವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದೆ. ಆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ವಾಡಿಕೆಗಿಂತ ಶೇ.49ರಷ್ಟು ಕಡಿಮೆ ಮಳೆಯಾಗಿದೆ.ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರೆ, ಮಂಡ್ಯ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನೆರೆಹಾವಳಿ ಉಂಟಾಗಿದೆ.
4
+ ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದೆ. ಅಲ್ಲಲ್ಲಿ ಮಳೆ ಮುಂದುವರೆದಿದ್ದು, ನದಿಗಳ ಪ್ರವಾಹವೂ ಇಳಿಕೆಯಾಗುತ್ತಿದೆ. ಆದರೆ, ಬಹುತೇಕ ಜಲಾಶಯಗಳು ಭರ್ತಿಯಾಗಿರುವುದರಿಂದ ಜಲಾಶಯಗಳಿಂದ ಹೆಚ್ಚು ನೀರು ನದಿಗಳಿಗೆ ಬಿಡುತ್ತಿರುವುದರಿಂದ ಕಾವೇರಿ, ಶರಾವತಿ, ಕೃಷ್ಣಾ ಹಾಗೂ ತುಂಗಭದ್ರಾ, ಘಟಪ್ರಭಾ, ಮಲಪ್ರಭಾ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ.
5
+ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕೃಷ್ಣಾ ಕೊಳ್ಳದ ಜಲಾನಯನ ಭಾಗದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.ಕೃಷ್ಣಾ ನದಿ ಪಾತ್ರದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಉಳಿದಂತೆ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಗಳ ಒಳಹರಿವು ಸಹ ಗಣನೀಯವಾಗಿ ಇಳಿಕೆಯಾಗಲಿದೆ.
6
+ ಜುಲೈ ತಿಂಗಳಿಗೆ ಹೋಲಿಸಿದರೆ, ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೂ ನಿರಂತರ ಮಳೆಯಾಗಿರುವುದರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಹಾನಿ ಸಮಸ್ಯೆಗಳು ತಲೆದೋರಿವೆ.
7
+ ಮುಂಗಾರು ಮಳೆ ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯಾವುದೇ ಮಳೆ ಮುನ್ನಚ್ಚರಿಕೆ ನೀಡಿಲ್ಲ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
eesanje/url_46_53_8.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ 3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌‍ ‘ಮೈಸೂರು ಚಲೋ’ ಪಾದಯಾತ್ರೆ
2
+ ಬೆಂಗಳೂರು,ಆ.5-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
3
+ ಶನಿವಾರ ಕೆಂಗೇರಿಯಿಂದ ಆರಂಭವಾದ ಪಾದಯಾತ್ರೆ ಭಾನುವಾರ ಕೆಂಗಲ್‌ನಲ್ಲಿ ಕೊನೆಗೊಂಡಿತ್ತು. ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್‌ ಹನುಮಂತಯ್ಯ ಅವರ ಹುಟ್ಟೂರು ಕೆಂಗಲ್‌ನಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೂರನೇ ದಿನದ ಪಾದಯಾತ್ರೆಗೆ ಚಾಲನೆ ಕೊಡಲಾಯಿತು.
4
+ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೆಂಗಲ್‌ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್‌‍ನ ಪ್ರಮುಖರು ಹಾಜರಿದ್ದರು.ಬಳಿಕ ಕೆಂಗಲ್‌ನಿಂದ ಪ್ರಾರಂಭವಾದ ಪಾದಯಾತ್ರೆಯು ಸುಮಾರು 16 ಕಿ.ಮೀ. ಶ್ರಮಿಸಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ನಿಡಘಟ್ಟದಲ್ಲಿ ಮುಕ್ತಾಯಗೊಂಡಿತು.
5
+ ಮೂರನೇ ದಿನವಾದ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ಮತ್ತು ಜೆಡಿಎಸ್‌‍ನ ಹಲವು ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.
6
+ ಬಿಜೆಪಿ ಹಾಗೂ ಜೆಡಿಎಸ್‌‍ನ ಬಾವುಟಗಳನ್ನು ಹಿಡಿದುಕೊಂಡು ಜೈಕಾರಗಳನ್ನು ಕೂಗಿ ಉತ್ಸಾಹದಿಂದಲೇ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಿದ್ದ ಉಭಯಪಕ್ಷಗಳ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕೆಂದು ಆಗ್ರಹಿಸಿದರು.
7
+ ಪಾದಯಾತ್ರೆಗೆ ಮೂರನೇ ದಿನ ಉಭಯ ಪಕ್ಷಗಳಲ್ಲಿ ಸಣ್ಣಪುಟ್ಟ ಗೊಂದಲಗಳು ನಿವಾರಣೆಯಾಗುತ್ತಿದ್ದು, ದಿನದಿಂದ ದಿನಕ್ಕೆ ಕಾರ್ಯಕರ್ತರ ಪಾಲ್ಗೊಳ್ಳುವಿಕೆಯು ಹೆಚ್ಚಾಗುತ್ತಲೇ ಇದೆ.
8
+ ಜೆಡಿಎಸ್‌‍ ಪ್ರಬಲವಾಗಿರುವ ಕಡೆ ತಮ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜೆಡಿಎಸ್‌‍ ಪ್ರತ್ಯೇಕವಾಗಿ ನಡೆಯುವ ತಂತ್ರಗಾರಿಕೆಯನ್ನು ಪ್ರಯೋಗ ಮಾಡಿತ್ತು. ಆದರೆ, ಇದು ದೋಸ್ತಿಗಳಲ್ಲಿ ಒಡಕಿನ ಸಂದೇಶ ಕೊಡುತ್ತಿರುವ ಹಿನ್ನೆಲೆಯಲ್ಲಿ ಮೂರನೇ ದಿನ ಜೊತೆಯಾಗಿಯೇ ಬಿಜೆಪಿ ಮತ್ತು ಜೆಡಿಎಸ್‌‍ ಕಾರ್ಯಕರ್ತರು ಹೆಜ್ಜೆ ಹಾಕಿದರು.
9
+ ಪಾದಯಾತ್ರೆ ಆರಂಭದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಮನಗರದಲ್ಲಿ ಪಾದಯಾತ್ರೆ ಅಂತ್ಯಗೊಂಡ ಬಳಿಕ ನಡೆಯಲಿರುವ ಕಾರ್ಯಕ್ರಮದಲ್ಲೂ ಡಿಕೆಶಿ ವಿರುದ್ಧ ಕಿಡಿಕಾರುವ ಸಂಭವವಿದೆ.
10
+ ಎಚ್‌ಡಿಕೆ ವಿರುದ್ಧ ಏ��� ವಚನದಲ್ಲೇ ವಾಗ್ದಾಳಿ ನಡೆಸಿದ್ದ ಡಿಕೆಶಿಗೆ ರಾಮನಗರದಲ್ಲಿ ಮತ್ತಷ್ಟು ಉತ್ತರ ಕೊಡುವುದಾಗಿ ಎಚ್‌ಡಿಕೆ ಎಚ್ಚರಿಕೆ ನೀಡಿದ್ದರು. ಜಿಲ್ಲೆಯ ಹೆಸರು ಬದಲಾವಣೆ ವಿಚಾರವಾಗಿ ರಾಮನಗರದಲ್ಲೇ ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಲಿದ್ದಾರೆ. ಬಿಡದಿಯಲ್ಲಿ ಅವರು ಡಿ.ಕೆ.ಶಿವಕುಮಾರ್‌ ಅವರು ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಆರೋಪಿಸಿದ್ದರು. ಬಿಡದಿಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಕಟ್ಟಿರುವ ನರ್ಸಿಂಗ್‌ ಕಾಲೇಜು ಒಬ್ಬ ಬಡ ಬ್ರಾಹಣನಿಗೆ ಸೇರಿದ್ದು ಎಂದು ಆರೋಪಿಸಿದ್ದರು. ಸದಾಶಿವ ನಗರದಲ್ಲಿ ವಿಧವೆ ಮಹಿಳೆಯರ ಜಮೀನು ತಮ ಮಗಳ ಹೆಸರಿಗೆ ಬರೆಸಿದ್ದಾರೆ ಎಂದು ದೂರಿದ್ದರು.
11
+ ಮೊದಲ ದಿನದ ಪಾದಯಾತ್ರೆಯಲ್ಲಿ ಅಂತರ ಕಾಯ್ದುಕೊಂಡಿದ್ದ ಜೆಡಿಎಸ್‌‍ ಮುಖಂಡ ನಿಖಿಲ್‌ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೇಯೇಂದ್ರ ಅವರು ಭಾನುವಾರ ಒಟ್ಟಿಗೆ ಹೆಜ್ಜೆ ಹಾಕಿದರು. ದಾರಿಯುದ್ದಕ್ಕೂ ಹೂವಿನ ಹಾರ, ತೂರಾಯಿಗಳಿಂದಲೇ ತುಂಬಿ ಹೋಗಿದ್ದ ಇಬ್ಬರು ನಾಯಕರುಗಳೊಟ್ಟಿಗೆ ಬಿಜೆಪಿ-ಜೆಡಿಎಸ್ನ ಶಾಸಕರು, ಎಂಎಲ್ಸಿಗಳು ನಡಿಗೆ ಹಾಕಿದರು.
12
+ ವಿಜಯೇಂದ್ರ ಮೇಲುಗೈ :ಮುಡಾ ಹಗರಣ ಹಾಗೂ ವಾಲೀಕಿ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್‌‍ ಹಮಿಕೊಂಡಿರುವ ಬೆಂಗಳೂರು- ಮೈಸೂರು ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೇಲುಗೈ ಸಾಧಿಸುತ್ತಿದ್ದಾರೆ.
eesanje/url_46_53_9.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡ್ತಾರಾ ರಾಜ್ಯಪಾಲರು..?
2
+ ಬೆಂಗಳೂರು,ಆ.5-ಒಂದು ವಾರದಿಂದ ದೆಹಲಿಯಲ್ಲಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು ಬೆಂಗಳೂರಿಗೆ ಮರಳಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ನೀಡಲಾದ ಮನವಿಯ ಕುರಿತು ಯಾವುದೇ ಕ್ಷಣದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
3
+ ನವದೆಹಲಿಗೆ ಭೇಟಿ ನೀಡಿದ್ದ ರಾಜ್ಯಪಾಲರು ಬಿಜೆಪಿ ಹೈಕಮಾಂಡ್‌ ಮತ್ತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದು, ಕಳೆದ ಜುಲೈ 26ರಂದು ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಹಾಂ, ರಾಜ್ಯಪಾಲರಿಗೆ ದೂರು ನೀಡಿದ್ದರು.
4
+ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ದೂರನ್ನ ಗಂಭೀರವಾಗಿ ಪರಿಗಣಿಸಿರುವ ರಾಜ್ಯಪಾಲರು ಇದೀಗ ಕಾನೂನು ತಜ್ಞರ ವರದಿ ಕೇಳಿದ್ದಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣಗಳು ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ನೀಡಿದ್ದ ತೀರ್ಪಿನ ಉಲ್ಲೇಖಿಸಿ ತಜ್ಞರು ವರದಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
5
+ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಜು.26ರಂದು ಶೋಕಾಸ್‌‍ ನೋಟಿಸ್‌‍ ನೀಡಿದ ಬಳಿಕ ರಾಜ್ಯಪಾಲರು ದೆಹಲಿ ಪ್ರವಾಸಕ್ಕೆ ತೆರಳಿದ್ದರು. ಇದರ ನಡುವೆ ನೋಟಿಸ್‌‍ ವಾಪಸ್‌‍ ಪಡೆಯಲು ಸಂಪುಟ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿದೆ. ಮತ್ತೊಂದೆಡೆ ನೋಟಿಸ್‌‍ಗೆ ಮುಖ್ಯಮಂತ್ರಿ ಅವರು ಉತ್ತರವನ್ನೂ ಕೊಟ್ಟಿದ್ದಾರೆ.
6
+ ರಾಜ್ಯ ಸರ್ಕಾರ ಕಳುಹಿಸಿರುವ ಮಂತ್ರಿಪರಿಷತ್‌ನ ನಿರ್ಧಾರವನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿದ್ದಾರೆ. ಸಿಎಂಗೆ ಕಳಿಸಿರುವ ನೋಟೀಸ್‌‍ ಅನ್ನು ವಾಪಸ್‌‍ ಪಡೆಯುವಂತೆ ರಾಜ್ಯಪಾಲರಿಗೆ ಸಂಪುಟ ಮನವಿ ಮಾಡಿದೆ.ಇದು ಪ್ರಾಸಿಕ್ಯೂಷನ್‌ಗೆ ಅರ್ಹ ಪ್ರಕರಣವೇ ಅಲ್ಲವೇ ಎಂದು ತೀರ್ಮಾನ ತೆಗೆದುಕೊಳ್ಳುವ ಹಾಗೂ ಕಾನೂನು ಸಲಹೆ ಬೇಕಿದ್ದರೆ ಮತ್ತೊಮೆ ವಕೀಲರ ಜತೆ ರಾಜ್ಯಪಾಲರು ಚರ್ಚೆ ನಡೆಸುವ ಸಂಭವ ಇದೆ ಎಂದು ಗೊತ್ತಾಗಿದೆ.
7
+ ಒಂದು ವೇಳೆ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ಕೊಟ್ಟರೆ ಕಾನೂನು ಕಂಟಕ ಎದುರಾಗಲಿದೆ. ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕ ಬೆನ್ನಲ್ಲೇ ಅಬ್ರಾಹಂ ಖಾಸಗಿ ದೂರು ದಾಖಲಿಸಲಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಬಹುದು. ಬಳಿಕ ಪ್ರಕರಣ ಸ್ವೀಕರಿಸುವ ಇಲ್ಲವೇ ತಿರಸ್ಕರಿಸುವ ಬಗ್ಗೆ ನ್ಯಾಯಾಲಯದಲ್ಲಿ ವಾದ ಹಾಗೂ ಪ್ರತಿವಾದ ನಡೆಯಲಿದೆ.
8
+ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ್ದೇ ಆದರೆ, ಅದಕ್ಕೆ ಸಾಂವಿಧಾನಿಕ ಮತ್ತು ರಾಜಕೀಯ ಪರಿಣಾಮಗಳು ಎದುರಾಗಬಹುದು ಎಂಬುದು ತಜ್ಞರ ಅಭಿ��್ರಾಯಪಟ್ಟಿದ್ದಾರೆ.ಈ ನಡುವೆ ಬಿಜೆಪಿ ಹೈಕಮಾಂಡ್‌ ಆತುರದ ನಿರ್ಧಾರ ಕೈಗೊಳ್ಳದಂತೆ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯಪಾಲರ ಮೂಲಕ ಸಲಹೆಯನ್ನೂ ರವಾನಿಸಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.
9
+ ಕಾನೂನು ಹೇಳುವುದು ಏನು? :ಇನ್ನು ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ತಮ ಪರ ನಿರ್ಣಯ ಅಂಗೀಕರಿಸಿಕೊಂಡರೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆಯೋ ಅಥವಾ ಇಲ್ಲವೋ ಎಂಬ ಗೊಂದಲಗಳು ಎದುರಾಗಿವೆ.
10
+ ಸಂಪುಟದಲ್ಲಿ ನಿರ್ಣಯ ಅಂಗೀಕಾರವಾದರೂ ಸಹ ಆರ್ಟಿಕಲ್‌ 163ರಲ್ಲಿ ಉಲ್ಲೇಖವಾಗಿರುವಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರಿ ಹೊಂದಿದ್ದಾರೆ ಎಂದು ಕಾನೂನು ತಜ್ಷರು ಅಭಿಪ್ರಾಯಪಟ್ಟಿದ್ದಾರೆ.
11
+ ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಗ್ಗೆ ರಾಜ್ಯಪಾಲರು ನೇರವಾಗಿ ತೀರ್ಮಾನ ತೆಗೆದುಕೊಳ್ಳಬಹುದು. ಆರ್ಟಿಕಲ್‌ 163ರಲ್ಲಿ ಈ ಬಗ್ಗೆ ಉಲ್ಲೇಖ ಆಗಿದೆ. ಸಂಪುಟದ ಅಭಿಪ್ರಾಯ ಕೊಟ್ಟರೆ ಅನುಮೋದನೆ ಮಾಡಲೇಬೇಕು ಎಂಬ ನಿಯಮವಿಲ್ಲ. ಅವರು ಕೌನ್ಸಿಲ್‌ ಮಿನಿಸ್ಟರ್‌ ತೀರ್ಮಾನದ ವಿರುದ್ಧವಾಗಿ ಅನುಮತಿ ನೀಡಬಹುದು ಎಂಬುದು ಕಾನೂನು ತಜ್ಞರ ವಾದವಾಗಿದೆ.
12
+ ಸಚಿವ ಸಂಪುಟ ತೀರ್ಮಾನವನ್ನು ಲೆಕ್ಕಿಸದೆ, ಪ್ರಾಸಿಕ್ಯೂಷನ್‌ ಗೆ ಕೊಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಅಕ್ರಮ ನಡೆದಿದೆ ಎಂಬುದು ಮನವರಿಕೆ ಆಗಿದ್ದರೆ ಕಾನೂನಿನ ಪ್ರಕಾರ ಸಂಪುಟದ ಅಭಿಪ್ರಾಯ ತೆಗೆದುಕೊಳ್ಳಬಹುದು. ಇಲ್ಲ ಸ್ವತಂತ್ರವಾಗಿ ಕೂಡ ತೀರ್ಮಾನ ಮಾಡಬಹುದು ಎಂದು ಕಾನೂನು ಹೇಳುತ್ತದೆ.
13
+ 2004ರಲ್ಲಿ ಮಧ್ಯಪ್ರದೇಶದ ಇಬ್ಬರು ಸಚಿವರು ಮೇಲೆ ಭೂಕಬಳಿಕೆ ಸಂಬಂದ ದೂರು ದಾಖಲಾಗಿತ್ತು. ಇವರ ವಿರುದ್ಧ ದೂರು ದಾಖಲಿಸದಂತೆ ಸಚಿವ ಸಂಪುಟದಲ್ಲಿ ಒಂದು ಸಾಲಿನ ನಿರ್ಣಯವನ್ನೂ ಸಹ ಮಾಡಲಾಗಿತ್ತು. ಆದರೆ ಅಂದಿನ ರಾಜ್ಯಪಾಲರು ಸಂಪುಟದ ತೀರ್ಮಾನವನ್ನು ಒಪ್ಪದೆ ತಾವಾಗಿಯೇ ಅನುಮತಿ ನೀಡಿದ್ದನ್ನು ಸುಪ್ರೆಂಕೋರ್ಟ್‌ ಒಪ್ಪಿತ್ತು. ಆದರೆ ನೇರವಾಗಿ ಕೇಂದ್ರದ ತನಿಖಾ ಸಂಸ್ಥೆಗೆ ನೀಡುವ ಹಾಗಿಲ್ಲ ಎಂಬುದನ್ನು ಸಹ ಉಲ್ಲೇಖ ಮಾಡಿತ್ತು.
14
+ ಸಿಎಂ ವಿರುದ್ಧ ವಿಚಾರಣಾ ಅನುಮತಿಯನ್ನು ರಾಜ್ಯಪಾಲರು ಕೊಟ್ಟರೆ ರಾಜಭವನದೊಂದಿಗೆ ಸಂಘರ್ಷಕ್ಕೆ ಇಳಿದರೂ ಆಶ್ಚರ್ಯವಿಲ್ಲ.ದೂರುದಾರರಾಗಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಹೇಳುವಂತೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡದೆ ಬೇರೆ ದಾರಿಯಿಲ್ಲ ಎಂದಿದ್ದಾರೆ.