CoolCoder44 commited on
Commit
25a924d
·
verified ·
1 Parent(s): 5b76a5e

72b0fc6bcf86b843fbaf7a064cd1917979987ab4b7d0f4146aa876653e47842e

Browse files
Files changed (50) hide show
  1. eesanje/url_46_191_3.txt +6 -0
  2. eesanje/url_46_191_4.txt +5 -0
  3. eesanje/url_46_191_5.txt +7 -0
  4. eesanje/url_46_191_6.txt +10 -0
  5. eesanje/url_46_191_7.txt +7 -0
  6. eesanje/url_46_191_8.txt +7 -0
  7. eesanje/url_46_191_9.txt +11 -0
  8. eesanje/url_46_192_1.txt +9 -0
  9. eesanje/url_46_192_10.txt +6 -0
  10. eesanje/url_46_192_11.txt +6 -0
  11. eesanje/url_46_192_12.txt +15 -0
  12. eesanje/url_46_192_2.txt +6 -0
  13. eesanje/url_46_192_3.txt +8 -0
  14. eesanje/url_46_192_4.txt +8 -0
  15. eesanje/url_46_192_5.txt +7 -0
  16. eesanje/url_46_192_6.txt +7 -0
  17. eesanje/url_46_192_7.txt +7 -0
  18. eesanje/url_46_192_8.txt +6 -0
  19. eesanje/url_46_192_9.txt +8 -0
  20. eesanje/url_46_193_1.txt +6 -0
  21. eesanje/url_46_193_10.txt +7 -0
  22. eesanje/url_46_193_11.txt +11 -0
  23. eesanje/url_46_193_12.txt +5 -0
  24. eesanje/url_46_193_2.txt +4 -0
  25. eesanje/url_46_193_3.txt +6 -0
  26. eesanje/url_46_193_4.txt +8 -0
  27. eesanje/url_46_193_5.txt +6 -0
  28. eesanje/url_46_193_6.txt +5 -0
  29. eesanje/url_46_193_7.txt +8 -0
  30. eesanje/url_46_193_8.txt +13 -0
  31. eesanje/url_46_193_9.txt +6 -0
  32. eesanje/url_46_194_1.txt +5 -0
  33. eesanje/url_46_194_10.txt +9 -0
  34. eesanje/url_46_194_11.txt +7 -0
  35. eesanje/url_46_194_12.txt +8 -0
  36. eesanje/url_46_194_2.txt +5 -0
  37. eesanje/url_46_194_3.txt +6 -0
  38. eesanje/url_46_194_4.txt +8 -0
  39. eesanje/url_46_194_5.txt +4 -0
  40. eesanje/url_46_194_6.txt +12 -0
  41. eesanje/url_46_194_7.txt +12 -0
  42. eesanje/url_46_194_8.txt +7 -0
  43. eesanje/url_46_194_9.txt +6 -0
  44. eesanje/url_46_195_1.txt +9 -0
  45. eesanje/url_46_195_10.txt +6 -0
  46. eesanje/url_46_195_11.txt +9 -0
  47. eesanje/url_46_195_12.txt +8 -0
  48. eesanje/url_46_195_2.txt +7 -0
  49. eesanje/url_46_195_3.txt +6 -0
  50. eesanje/url_46_195_4.txt +4 -0
eesanje/url_46_191_3.txt ADDED
@@ -0,0 +1,6 @@
 
 
 
 
 
 
 
1
+ ಏ.1ರಂದು ಶ್ರೀ ಶಿವಕುಮಾರ ಸ್ವಾಮೀಜಿ ಅವರ 117ನೆ ಜಯಂತಿ
2
+ ತುಮಕೂರು, ಮಾ.30-ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 117ನೆ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ಏ.1ರಂದು ಬೆಳಿಗ್ಗೆ 11 ಗಂಟೆಗೆ ಸಿದ್ಧಗಂಗಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಸಂಸ್ಥೆಗಳ ಆಡಳಿತಾಧಿಕಾರಿ ಟಿ.ಕೆ.ನಂಜುಡಪ್ಪ ತಿಳಿಸಿದರು.
3
+ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಶ್ರೀಗಳ ಜಯಂತಿ ಆಚರಿಸಲಾಗುತ್ತಿದ್ದು, ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಹಿಸಲಿದ್ದು, ಅಧ್ಯಕ್ಷತೆಯನ್ನು ಮೈಸೂರು ಸುತ್ತೂರು ಮಠದ ಶ್ರೀ ಶಿವರಾತಿ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ಪತಂಜಲಿ ಯೋಗ ಗುರು ರಾಮದೇವ್ ಮಾಡಲಿದ್ದಾರೆ ಎಂದು ತಿಳಿಸಿದರು.
4
+ ದಿವ್ಯ ಸಾನಿಧ್ಯವನ್ನು ಮುಂಡರಗಿ ಮಹಾಸಂಸ್ಥಾನದ ಅಧ್ಯಕ್ಷರಾದ ಡಾ.ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಧಾರವಾಡ ಮುರುಘಮಠದ ಅಧ್ಯಕ್ಷರಾದ ಡಾ.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಗದುಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷರಾದ ಶ್ರೀ ಕಲ್ಲಯ್ಯ ಅಜ್ಜ, ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ವಹಿಸಲಿದ್ದಾರೆ.
5
+ ಈ ಬಾರಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಜನಪ್ರತಿನಿಧಿಗಳು ನಾಯಕರುಗಳಿಗೆ ವೇದಿಕೆ ಕಾರ್ಯಕ್ರಮಕ್ಕೆ ಆಮಂತ್ರಣವಿರುವುದಿಲ್ಲ. ಧಾರ್ಮಿಕ ಗುರುಗಳನ್ನು ಅತಿಥಿಗಳನ್ನಾಗಿ ಆಹ್ವಾನಿಸಿ ಗುರುವಂದನಾ ಮಹೋತ್ಸವ ನಡೆಸಲಾಗುತ್ತಿದೆ.
6
+ ಅಂದು ಬೆಳಗ್ಗೆ ಮುಂಜಾನೆಯಿಂದಲೇ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ನೆರವೇರಲಿದ್ದು, ಪುತ್ಥಳಿಯ ಮೆರವಣಿಗೆ ಕೂಡ ನಡೆಸಲಾಗುವುದು ಎಂದು ತಿಳಿಸಿದರು. ಜಯಂತಿ ಅಂಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಗೆ ಅನ್ನ ದಾಸೋಹ ಏರ್ಪಡಿಸಿದ್ದು, ಊಟಕ್ಕೆ ಸಿಹಿಬೂಂದಿ, ಖಾರ ಬೂಂದಿ, ಚಿತ್ರಾನ್ನ, ಮಜ್ಜಿಗೆಯನ್ನು ಬಡಿಲಾಗುವುದು ಎಂದು ಮಠದ ಆಡಳಿತಾಧಿಕಾರಿ ವಿಶ್ವನಾಥ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಠದ ಸಹಾಯಕ ಆಡಳಿತಾಧಿಕಾರಿ ಮಲ್ಲಿಕಾರ್ಜುನಯ್ಯ, ಶಿವಕುಮಾರಯ್ಯ ಉಪಸ್ಥಿತರಿದ್ದರು.
eesanje/url_46_191_4.txt ADDED
@@ -0,0 +1,5 @@
 
 
 
 
 
 
1
+ 20ಕ್ಕೂ ಹೆಚ್ಚು ಬಿಲ್ಡರ್‌ಗಳ ಕಚೇರಿ, ನಿವಾಸಗಳ ಮೇಲೆ ಐಟಿ ದಾಳಿ
2
+ ಬೆಂಗಳೂರು, ಮಾ.30- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಂಗ್ರಹ ಹಾಗೂ ಹಣ ವರ್ಗಾವಣೆ ಮೇಲೆ ಕಣ್ಣಿಟ್ಟಿರುವ ಐಟಿ ಅಧಿಕಾರಿಗಳು ರಾಜಧಾನಿ ಬೆಂಗಳೂರಿನ 20 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ.
3
+ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳಿಗೆ ಬಿಲ್ಡರ್ಗಳು ಫಂಡಿಂಗ್ ಮಾಡುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ 20 ಕ್ಕೂ ಹೆಚ್ಚು ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
4
+ ಕಳೆದ ವಾರವಷ್ಟೆ ಬೆಂಗಳೂರಿನ ಮೇಘನಾ ಫುಡ್ ಗ್ರೂಪ್ ಕಂಪನಿಗೆ ಸೇರಿದ 10 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ನಡೆಸುತ್ತಿದ್ದು, ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕೋರಮಂಗಲ, ಜಯನಗರ, ಇಂದಿರಾನಗರದಲ್ಲಿರುವ ಶಾಖೆಗಳ ಮೇಲೆ ದಾಳಿ ಮಾಡಲಾಗಿತ್ತು.
5
+ ಇಂದು ನಗರದ 20 ಕ್ಕೂ ಹೆಚ್ಚು ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಚುನಾವಣಾ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಕಳೆದ ವಾರವಷ್ಟೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಭರ್ಜರಿ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು, ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
eesanje/url_46_191_5.txt ADDED
@@ -0,0 +1,7 @@
 
 
 
 
 
 
 
 
1
+ ರಾಮೇಶ್ವರಂ ಕೆಫೆ ಸ್ಫೋಟಿಸಲು ಕೇವಲ 5 ಸಾವಿರದಲ್ಲಿ ಬಾಂಬ್ ತಯಾರಿಸಿದ್ದ ಉಗ್ರರು
2
+ ಬೆಗಳೂರು, ಮಾ.30-ನಗರದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಿದ ಬಾಂಬ್ ತಯಾರಿಸಲು ದುಷ್ಕರ್ಮಿಗಳು ಸುಮಾರು 2 ತಿಂಗಳು ಸಮಯ ತೆಗೆದುಕೊಂಡಿದ್ದರು ಎಂಬುದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ.ಈ ಶಂಕಿತ ಉಗ್ರರು ಬಾಂಬ್ ತಯಾರಿಸಲು ಬೇಕಾದ ಕೆಲವು ಕಚ್ಚಾವಸ್ತುಗಳನ್ನು ಆನ್ಲೈನ್ ಮೂಲಕ ಹಾಗೂ ಮತ್ತೆ ಕೆಲವು ಸಾಮಗ್ರಿಗಳನ್ನು ವಿವಿಧ ಅಂಗಡಿಗಳಲ್ಲಿ ಖರೀದಿಸಿರುವುದು ಗೊತ್ತಾಗಿದೆ.
3
+ ಶಂಕಿತ ಉಗ್ರರು ಆನ್ಲೈನ್ನಲ್ಲಿ ಡೆಟೋನೇಟರ್, ಬ್ಯಾಟರಿ, ಟೈಮರ್, ರಂಜಕ ಹಾಗೂ ಅಂಗಡಿಗಳಲ್ಲಿ ನಟ್, ಬೋಲ್ಟ್, ಕೆಲವು ವೈರುಗಳನ್ನು ಖರೀದಿಸಿರುವುದನ್ನು ಎನ್ಐಎ ಪತ್ತೆಹಚ್ಚಿದೆ.ಕೆಫೆ ಸ್ಫೋಟದ ಬಗ್ಗೆ ಎನ್ಐಎ ಈಗಾಗಲೇ ಬಂಧಿಸಿರುವ ಮುಜಾಮಿಲ್ ಶರೀಫ್ ಈ ಎಲ್ಲಾ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಿ ಬಾಂಬ್ ತಯಾರಿಸುತ್ತಿದ್ದ ಅಬ್ದುಲ್ ಮತಿನ್ ತಾಹ ಹಾಗೂ ಪ್ರಮುಖ ಆರೋಪಿ ಮುಸಾವೀರ್ಗೆ ನೀಡುತ್ತಿದ್ದನು ಎಂಬುದು ಎನ್ಐಎ ತನಿಖೆಯಿಂದ ಗೊತ್ತಾಗಿದೆ.
4
+ ಆನ್ಲೈನ್ ಹಾಗೂ ಅಂಗಡಿಗಳಲ್ಲಿ ಖರೀದಿಸಿದ ಈ ಎಲ್ಲಾ ವಸ್ತುಗಳನ್ನು ಸಂಗ್ರಹಿಸಿ, ಶಂಕಿತ ಉಗ್ರರು ನಗರ ಹೊರವಲಯದಲ್ಲಿ ಬಾಂಬ್ ಸಿದ್ಧ ಪಡಿಸಿದ್ದರು ಎಂಬುದನ್ನು ಎನ್ಐಎ ಪತ್ತೆ ಹಚ್ಚಿದೆ.ಈ ಬಾಂಬ್ ತಯಾರಿಸಲು ಶಂಕಿತ ಉಗ್ರರು ಕೇವಲ ಐದರಿಂದ ಆರು ಸಾವಿರ ರೂ. ವೆಚ್ಚ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.
5
+ ಕೆಫೆಯಲ್ಲಿ ಮಾ.1ರಂದು ಬಾಂಬ್ ಸ್ಫೋಟದ ನಂತರ ತನಿಖೆ ಕೈಗೊಂಡ ಎನ್ಐಎ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ದೊರೆತ ಮಾಹಿತಿಯಿಂದ ಈ ಸ್ಫೋಟದ ಹಿಂದೆ ಶಂಕಿತ ಉಗ್ರರಾದ ಅಬ್ದುಲ್ ಮತಿನ್ ತಾಹ ಮತ್ತು ಮುಸಾವೀರ್ ಇರುವುದು ಗೊತ್ತಾಗಿತ್ತು.
6
+ ಅದರ ಜಾಡು ಹಿಡಿದು ಎನ್ಐಎ ಅಧಿಕಾರಿಗಳು ತನಿಖೆ ತೀವ್ರ ಗೊಳಿಸಿ ನಗರದ ಐದು ಕಡೆ, ಚೆನ್ನೈ, ತೀರ್ಥಹಳ್ಳಿ, ಭಟ್ಕಳದಲ್ಲಿ ದಾಳಿ ಮಾಡಿ ಹಲವರನ್ನು ವಿಚಾರಣೆಗೆ ಒಳಪಡಿಸಿ, ಅವರು ನೀಡಿದ ಮಾಹಿತಿ ಮೇರೆಗೆ ಮುಜಾಮಿಲ್ ಶರೀಫ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಅಬ್ದುಲ್ ಮತಿನ್ ತಾಹ ಮತ್ತು ಮುಸಾವೀರ್ ಕೆಫೆ ಸ್ಫೋಟದ ರುವಾರಿಗಳು ಎಂಬುದು ಮತ್ತಷ್ಟು ಖಚಿತವಾಗಿದೆ.
7
+ ಈ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಈ ಇಬ್ಬರು ಶಂಕಿತ ಉಗ್ರರ ಛಾಯಾಚಿತ್ರಗಳನ್ನು ಎನ್ಐಎ ಬಿಡುಗಡೆ ಮಾಡಿ ಇವರುಗಳ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿ, ಸಾರ್ವಜನಿಕರು ಪತ್ತೆಗೆ ಸಹಕರಿಸುವಂತೆ ಮನವಿ ಮಾಡಿದೆ. ಹಿಂದುವಿನಂತೆ ವೇಶ ಬದಲಿಸಿಕೊಂಡು, ಈ ಇಬ್ಬರು ಹಿಂದೂ ಹೆಸರಿಟ್ಟುಕೊಂಡು ಓಡಾಡುತ್ತಿದ್ದಾರೆ ಎಂಬುದು ಗೊತ್ತಾಗಿದ್ದು, ಎನ್ಐಎ ಅಧಿಕಾರಿಗಳು ಹದ್ದಿನ ಕಣ್ಣಿಟ್ಟು ಹಗಲಿರುಳು ಸೋಟದ ಈ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕಾಗಿ ಶ್ರಮಿಸುತ್ತಿದ್ದಾರೆ.
eesanje/url_46_191_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಶಿಸ್ತು ಉಲ್ಲಂಘಿಸಿದರೆ ಹುಷಾರ್ : ಸಚಿವರು, ಶಾಸಕರಿಗೆ ಡಿಕೆಶಿ ವಾರ್ನಿಂಗ್
2
+ ಬೆಂಗಳೂರು, ಮಾ.30-ಸಚಿವರು, ಶಾಸಕರೂ ಸೇರಿದಂತೆ ಎಲ್ಲರಿಗೂ ಶಿಸ್ತು ಮುಖ್ಯ. ಲಕ್ಷ್ಮಣರೇಖೆ ದಾಟುವಂತಿಲ್ಲ. ಗೆಲ್ಲುವುದು ಅಥವಾ ಸೋಲುವುದು ಬೇರೆ ವಿಚಾರ. ಆದರೆ ಈಗಲೂ ಶಿಸ್ತನ್ನು ಉಲ್ಲಂಘಿಸಿದರೆ ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಚುನಾವಣಾ ಅಭ್ಯರ್ಥಿಗೆ ಸಂಬಂಧಪಟ್ಟಂತೆ ತಾವು ಹಾಗೂ ಮುಖ್ಯಮಂತ್ರಿಯವರು ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ರಮೇಶ್ಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಎರಡೂ ಬಣಗಳಿಗೂ ಟಿಕೆಟ್ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇವೆ. ಅವರ ಸ್ವಾರ್ಥಗಳಿಗೆ ಮಣೆ ಹಾಕಿಲ್ಲ ಎಂದರು.
4
+ ಪರ್ಯಾಯ ಅಭ್ಯರ್ಥಿ ಗೌತಮ್ ಸಾಮಾನ್ಯ ಕಾರ್ಯಕರ್ತ ಪಕ್ಷದ ನಿಷ್ಠಾವಂತ. ಹೈಕಮಾಂಡ್ ಟಿಕೆಟ್ ಕೊಟ್ಟವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಎಲ್ಲರೂ ಹೇಳಿದ್ದರು. ಹೀಗಾಗಿ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಇದರಲ್ಲಿ ಯಾವುದೇ ಒಳ ಏಟು ಅಥವಾ ಆಂತರಿಕ ಭಿನ್ನಮತ ಇರುವುದಿಲ್ಲ ಎಂದರು.’
5
+ ಕೋಲಾರದಲ್ಲಿ ಬಲಗೈ ಸಮುದಾಯದ ಸಂಖ್ಯೆ ಹೆಚ್ಚಿದೆ. ಹೀಗಾಗಿ ಆ ವರ್ಗಕ್ಕೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಯಿಟ್ಟಿದ್ದು ನಿಜ. ಆದರೆ ನಾವು ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡಿದ್ದೇವೆ. 10 ಲೋಕಸಭಾ ಕ್ಷೇತ್ರದಲ್ಲಿ ಎಡಗೈ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷ ಎಡಗೈ ಸಮುದಾಯಕ್ಕೆ ಎರಡು ಸ್ಥಾನಗಳನ್ನು ನೀಡುತ್ತಿದ್ದೇವೆ. ಈ ಬಾರಿಯೂ ಅದನ್ನು ಮುಂದುವರೆಸುತ್ತೇವೆ. ಬಿಜೆಪಿಯವರು ಎರಡು ಕ್ಷೇತ್ರಗಳಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದರು.
6
+ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಕೇಂದ್ರ ಗೃಹಸಚಿವ ಅಮಿತ್ ಷಾ ರೋಡ್ ಶೋ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೆಚ್ಚು ಪ್ರಬಲರಾದರೆ ಶತ್ರುಗಳ ಸಂಖ್ಯೆಯೂ ಹೆಚ್ಚಾಗುತ್ತದೆ. ಅಮಿತ್ ಷಾ ಬರಲಿ, ಗೌರವಾನ್ವಿತ ಪ್ರಧಾನಿಯವರೂ ಬರಲಿ, ನಮಗೆ ದೇವೇಗೌಡರು, ಅವರ ಕುಟುಂಬದ ಮಗ, ಸೊಸೆ, ಮೊಮ್ಮಗ ಎಲ್ಲರ ವಿರುದ್ಧವೂ ಸ್ರ್ಪಧಿಸಿಯಾಗಿದೆ. ಕಾಂಗ್ರೆಸ್ ಪಕ್ಷ ನಮ್ಮ ನಾಯಕತ್ವ ಸಿದ್ಧಾಂತದ ಮೇಲೆ ಚುನಾವಣೆ ನಡೆಸುತ್ತದೆ ಎಂದರು.
7
+ ಕೋವಿಡ್ ಸಂದರ್ಭದಲ್ಲಿ ಸಂತ್ರಸ್ತರಿಗೆ ನೆರವು ನೀಡಲು, ಆಹಾರದ ಕಿಟ್ ನೀಡಲು, ಹೆಣ ಹೊರಲು ಯಾರಿದ್ದರು? ಆಗೆಲ್ಲಾ ಡಿ.ಕೆ.ಸುರೇಶ್ ಮತ್ತು ಕಾಂಗ್ರೆಸ್ ಪಕ್ಷ ಮಾತ್ರ ಕೆಲಸ ಮಾಡಿತ್ತು ಎಂದರು.ಕನಕಪುರದಲ್ಲಿ ಕಲ್ಲು ಮತ್ತು ಹೃದಯ ಎಂಬ ಚರ್ಚೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಲ್ಲು ಒಡೆದರೆ ಪ್ರಕೃತಿ, ಕೆತ್ತಿದರೆ ಆಕೃತಿ, ಪೂಜಿಸಿದರೆ ಸಂಸ್ಕøತಿ ಎಂದು ಹೇಳಿದರು.
8
+ ದೆಹಲಿ ಸೇರಿದಂತೆ ರಾಷ್ಟ್ರಾದ್ಯಂತ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ನೋಟೀಸ್ ನೀಡಿ ಕಿರುಕುಳ ನೀಡಲಾಗುತ್ತಿದೆ. ಹಿರಿಯ ಒಕ್ಕೂಟ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದೆ ಎಂಬ ಆತಂಕದಲ್ಲಿ ಈ ರೀತಿಯ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಟೀಕಿಸಿದರು.
9
+ ಕಮ್ಯುನಿಸ್ಟ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳನ್ನು ಎನ್ಡಿಎ ಗುರಿಯಾಗಿಸಿಕೊಂಡಿದೆ. ವಿಪಕ್ಷಗಳನ್ನು ದುರ್ಬಲಗೊಳಿಸಲು ಕೇಂದ್ರ ತನಿಖಾ ದಳಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ವೈಯಕ್ತಿಕವಾಗಿ ನನಗೂ ನೋಟೀಸ್ ನೀಡಲಾಗಿದೆ ಎಂದು ಹೇಳಿದರು.
10
+ ರಾಜ್ಯದಿಂದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ಬಿಜೆಪಿ ನಾಯಕರೂ ಸೇರಿದಂತೆ ಹಲವರ ವಿರುದ್ಧ ಪ್ರಕರಣಗಳಿವೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ದೋಷಾರೋಪಣ ಪಟ್ಟಿ ಸಲ್ಲಿಸುವುದಿಲ್ಲ. ಆದರೆ ನಮ್ಮ ವಿರುದ್ಧ ಸಿಬಿಐ, ಇಡಿ, ಆದಾಯ ತೆರಿಗೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
eesanje/url_46_191_7.txt ADDED
@@ -0,0 +1,7 @@
 
 
 
 
 
 
 
 
1
+ ಚುನಾವಣಾ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್​​​ಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು…
2
+ ಬೆಂಗಳೂರು,ಮಾ.30-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಲಿಕಾಫ್ಟರ್ಗಳಿಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಕಳೆದ ಚುನಾವಣೆಗೆ ಹೊಲಿಸಿದರೆ ಈ ಬಾರಿ ಅದಕ್ಕಿಂತ ಮೂರು ಪಟ್ಟು ಹೆಚ್ಚು ಕಾಫ್ಟರ್ಗಳಿಗೆ ಬೇಡಿಕೆ ಬಂದಿರುವುದು ವಿಶೇಷವಾಗಿದೆ.
3
+ ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಆಗಮಿಸುವ ಸ್ಟಾರ್ ಪ್ರಚಾರಕರುಗಳಿಗಾಗಿ ಮೂರು ಪಕ್ಷಗಳ ಮುಖಂಡರುಗಳು ಹೆಲಿಕಾಫ್ಟರ್ ಬುಕ್ಕಿಂಗ್ಗೆ ಮುಗಿ ಬಿದ್ದಿದ್ದಾರೆ. ಹೀಗಾಗಿ ಹೆಲಿಕಾಪ್ಟರ್ ಹಾಗೂ ಮಿನಿ ವಿಮಾನಗಳಿಗೆ -ಫುಲ್ ಡಿಮ್ಯಾಂಡ್ ಬಂದಿದೆ.
4
+ ತಮ್ಮ ಪಕ್ಷದ ಅಭ್ಯರ್ಥಿಗಳಿಗಾಗಿ ಕೆಲ ಹೆಲಿಕಾಪ್ಟರ್ ಗಳನ್ನು ಕಾಯ್ದೆರಿಸುವಂತೆ ಎಚ್ಎಎಲ್ ಗೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ಮಾತ್ರವಲ್ಲ, ಮೂರು ಪಕ್ಷದ ಸ್ಟಾರ್ ಪ್ರಚಾರಕರಿಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಲಾಗಿದೆ.ಈ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬೆಂಗಳೂರಿಗೆ ನೂರಾರು ಹೆಲಿಕಾಫ್ಟರ್ಗಳನ್ನು ಕರೆಸಿಕೊಳ್ಳಲಾಗಿದೆ. ಹೆಲಿಕಾಪ್ಟರ್, ಮಿನಿ ವಿಮಾನಗಳಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಫ್ಟರ್ಗಳ ಬಾಡಿಗೆ ದರವನ್ನು ಏರಿಕೆ ಮಾಡಿರುವುದು ವಿಶೇಷವಾಗಿದೆ.
5
+ ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ಜೈಪುರ,ದೆಹಲಿ, ಕೋಲ್ಕತಾ ಹಾಗೂ ಕೊಚ್ಚಿಯಿಂದ ಹೆಲಿಕಾಪ್ಟರ್ಗಳನ್ನು ಕರೆಸಿಕೊಳ್ಳಲಾಗಿದ್ದು, ಈ ಬಾರಿ ಶೇ.15ರಷ್ಟು ದರ ಹೆಚ್ಚಳ ಮಾಡಲಾಗಿದೆ.ರಾಜ್ಯದಲ್ಲಿ ಹುಬ್ಬಳ್ಳಿ, ಕಲಬುರ್ಗಿ, ಬೆಂಗಳೂರಿನ ಹೆಚ್ ಎಎಲ್ , ಜಕ್ಕೂರು, ವೈಟ್ ಫೀಲ್ಡ್, ಬೀದರ್ ಬೆಳಗಾವಿ ಏರ್ ಪೋರ್ಟ್ ಹಾಗೂ ಹೆಲಿಪ್ಯಾಡ್ಗಳಲ್ಲಿ ಕಾಫ್ಟರ್ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
6
+ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಟಾರ್ ಪ್ರಚಾರಕರನ್ನು ಕರೆದೊಯ್ಯುವ ಕಾಫ್ಟರ್ಗಳು ಅಲ್ಲಿಂದ ಅವರನ್ನು ನಿಗದಿತ ಸ್ಥಳಕ್ಕೆ ಕರೆದೊಯ್ಯಲು ಕಾರ್ ವ್ಯವಸ್ಥೆ ಕಲ್ಪಿಸಿಕೊಡಲು ಮುಂದಾಗಿವೆ.
7
+ ಪ್ರತಿಗಂಟೆಗೆ ಕಾಫ್ಟರ್ಗಳ ಬಾಡಿಗೆ 2 ಆಸನದ ಹೆಲಿಕಾಪ್ಟರ್ಗೆ ಒಂದು ಗಂಟೆಗೆ ಎರಡೂವರೆ ಲಕ್ಷ , 4 ಆಸನದ ಹೆಲಿಕಾಪ್ಟರ್ಗೆ ಮೂರು ಲಕ್ಷ , 6 ಆಸನದ ಮಿನಿ ವಿಮಾನಕ್ಕೆ 3.50 ಲಕ್ಷ ರೂ.ಗಳ ಬಾಡಿಗೆ ನಿಗದಿ ಮಾಡಲಾಗಿದೆ. ಅದೇ ರೀತಿ ಎಂಟು ಆಸನದ ಮಿನಿ ವಿಮಾನಕ್ಕೆ 4 ಲಕ್ಷ ರೂ, 13 ಆಸನದ ಮಿನಿವಿಮಾನಕ್ಕೆ ಒಂದು ಗಂಟೆಗೆ ನಾಲ್ಕುವರೆ ಲಕ್ಷ ರೂ.ಗಳ ಬಾಡಿಗೆ ಗೊತ್ತುಪಡಿಸಲಾಗಿದೆ. ಆದರೂ ಕಾಫ್ಟರ್ಗಳ ಬೇಡಿಕೆ ಮಾತ್ರ ಕುಂದಿಲ್ಲ.
eesanje/url_46_191_8.txt ADDED
@@ -0,0 +1,7 @@
 
 
 
 
 
 
 
 
1
+ ಅಭ್ಯರ್ಥಿ ಆಯ್ಕೆ ಹೈಡ್ರಾಮಾ ಮುಕ್ತಾಯ, ಮತ್ತಷ್ಟು ರಂಗೇರಲಿದೆ ಲೋಕಸಭೆ ಚುನಾವಣೆ
2
+ ಬೆಂಗಳೂರು,ಮಾ.30-ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಚುನಾವಣೆಗಾಗಿ ಪ್ರಮುಖ ರಾಷ್ಟ್ರೀಯ ಪಕ್ಷಗಳು ತಮ್ಮ ಎಲ್ಲಾ ಅಭ್ಯರ್ಥಿಗಳನ್ನು ಪ್ರಕಟಿಸುವ ಮೂಲಕ ಚುನಾವಣಾ ಕಣ ಕಾವೇರಲಾರಂಭಿಸಿದೆ.
3
+ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯೊಂದಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಜೆಡಿಎಸ್, ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಹುರಿಯಾಳುಗಳನ್ನು ನಿಲ್ಲಿಸಿದ್ದರೆ, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿದ್ದಾರೆ.
4
+ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲದೆ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ವಿವಿಧ ಪಕ್ಷಗಳೊಂದಿಗೆ ಇಂಡಿಯಾ ರಾಜಕೀಯ ಕೂಟವನ್ನು ರಚಿಸಿಕೊಂಡಿದೆ. ಆದರೆ ಆ ಪಕ್ಷಗಳಿಂದ ಈವರೆಗೆ ಯಾವುದೇ ಅಭ್ಯರ್ಥಿಗಳು ಕಣದಲ್ಲಿರುವುದು ಕಂಡುಬಂದಿಲ್ಲ.
5
+ ನಿನ್ನೆ ಜೆಡಿಎಸ್ ತನ್ನ ಮೂರು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಇಂದು ಬೆಳಗ್ಗೆ ಕಾಂಗ್ರೆಸ್ ಕೊನೆಯದಾಗಿ ಕೋಲಾರ ಕ್ಷೇತ್ರಕ್ಕೆ ಕೆ.ವಿ.ಗೌತಮ್ ಅವರನ್ನು ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಮೂರು ಪಕ್ಷಗಳು ತಮ್ಮ ಹುರಿಯಾಳುಗಳನ್ನು ಅಖಾಡಕ್ಕಿಳಿಸಿವೆ.
6
+ ಕಾಂಗ್ರೆಸ್‍ಗೆ 4 ಕ್ಷೇತ್ರಗಳಲ್ಲಿ ಬಂಡಾಯದ ಆತಂಕ ಇದ್ದರೆ ಬಿಜೆಪಿಗೆ 7ರಿಂದ 8 ಕ್ಷೇತ್ರಗಳಲ್ಲಿ ಅಸಮಾಧಾನಿತರ ಕಾವು ಹೆಚ್ಚಾಗಿದೆ. ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಏ.4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
7
+ ಕಣದಲ್ಲಿರುವ ಪ್ರಮುಖ ಪಕ್ಷಗಳ ಅಭ್ಯರ್ಥಿಗಳುಚಿಕ್ಕೋಡಿ : ಅಣ್ಣಾಸಾಹೇಬ್‍ಜೊಲ್ಲೆ (ಬಿಜೆಪಿ) ಪ್ರಿಯಾಂಕ ಜಾರಕಿಹೊಳ್ಳಿಬೆಳಗಾವಿ : ಜಗದೀಶ್ ಶೆಟ್ಟರ್(ಬಿಜೆಪಿ) ಮೃಣಾಳ್ ಹೆಬ್ಬಾಳ್ಕರ್ಬಾಗಲಕೋಟೆ : ಪಿ.ಸಿ.ಗದ್ದೀಗೌಡರ್(ಬಿಜೆಪಿ) ಸಂಯುಕ್ತ.ಎಸ್.ಪಾಟೀಲ್ಬಿಜಾಪುರ : ರಮೇಶ್ ಜಿಗಜಿಣಗಿ(ಬಿಜೆಪಿ) ಎ.ರಾಜು ಅಲಗೂರುಕಲಬುರಗಿ : ಉಮೇಶ್ ಜಾಧವ್(ಬಿಜೆಪಿ) ರಾಧಾಕೃಷ್ಣ ದೊಡ್ಡಮನಿರಾಯಚೂರು : ರಾಜಾ ಅಮರೇಶ್ವರ್ ನಾಯಕ(ಬಿಜೆಪಿ) ಜಿ.ಕುಮಾರ್‍ನಾಯಕ್ಬೀದರ್ : ಭಗವಂತ ಖೂಬಾ(ಬಿಜೆಪಿ) ಸಾಗರ್ ಖಂಡ್ರೆಕೊಪ್ಪಳ : ಬಸವರಾಜ್ ಕಾವಟರ್ (ಬಿಜೆಪಿ) ರಾಜಶೇಖರ ಹಿಟ್ನಾಳ್ಬಳ್ಳಾರಿ : ಬಿ.ಶ್ರೀರಾಮುಲು(ಬಿಜೆಪಿ) ಇ.ತುಕಾರಾಂಹಾವೇರಿ : ಬಸವರಾಜ ಬೊಮ್ಮಾಯಿ(ಬಿಜೆಪಿ) ಆನಂದಸ್ವಾಮಿ ಗಡ್ಡದೇವರ ಮಠಧಾರವಾಡ : ಪ್ರಹ್ಲಾದ್ ಜೋಶಿ(ಬಿಜೆಪಿ) ವಿನೋದ್ ಅಸೋಟಿಉತ್ತರಕನ್ನಡ : ವಿಶ್ವೇಶ್ವರ ಹೆಗಡೆ ಕಾಗೇರಿ(ಬಿಜೆಪಿ) ಅಂಜಲಿ ನಿಂಬಾಳ್ಕರ್ದಾವಣಗೆರೆ : ಗಾಯತ್ರಿ ಸಿದ್ಧೇಶ್ವರ್ (ಬಿಜೆಪಿ) ಪ್ರಭಾ ಮಲ್ಲಿಕಾರ್ಜುನ್ಶಿವಮೊಗ್ಗ : ಬಿ.ವೈ.ರಾಘವೇಂದ್ರ(ಬಿಜೆಪಿ) ಗೀತಾ ಶಿವರಾಜ್‍ಕುಮಾರ್ಉಡುಪಿ-ಚಿಕ್ಕಮಗಳೂರು : ಕೋಟಾ ಶ್ರೀನಿವಾಸಪೂಜಾರಿ(ಬಿಜೆಪಿ) ಜಯಪ್ರಕಾಶ್ ಹೆಗ್ಡೆಹಾಸನ : ಪ್ರಜ್ವಲ್ ರೇವಣ್ಣ (ಜೆಡಿಎಸ್) ಶ್ರೇಯಸ್ ಪಟೇಲ್ ಗೌಡದಕ್ಷಿಣ ಕನ್ನಡ : ಬ್ರಿಜೇಶ್ ಚೌಟ(ಬಿಜೆಪಿ) ಪದ್ಮರಾಜ್ಚಿತ್ರದುರ್ಗ : ಗೋವಿಂದ ಕಾರಜೋಳ(ಬಿಜೆಪಿ) ಬಿ.ಎನ್.ಚಂದ್ರಪ್ಪತುಮಕೂರು : ವಿ.ಸೋಮಣ್ಣ (ಬಿಜೆಪಿ) ಎಸ್.ಪಿ.ಮುದ್ದಹನುಮೇಗೌಡಮಂಡ್ಯ : ಎಚ್.ಡಿ.ಕುಮಾರಸ್ವಾಮಿ( ಜೆಡಿಎಸ್) ವೆಂಕಟರಮಣೇ ಗೌಡಮೈಸೂರು : ಯದುವೀರ್ ಒಡೆಯರ್ (ಬಿಜೆಪಿ) ಎಂ.ಲಕ್ಷ್ಮಣ್ಚಾಮರಾಜನಗರ : ಎಸ್.ಬಾಲರಾಜ್(ಬಿಜೆಪಿ) ಸುನೀಲ್ ಬೋಸ್ಬೆಂಗಳೂರು ಗ್ರಾ. : ಡಾ.ಸಿ.ಎನ್.ಮಂಜುನಾಥ್ (ಬಿಜೆಪಿ) ಡಿ.ಕೆ.ಸುರೇಶ್ಬೆಂಗಳೂರು ಉತ್ತರ : ಶೋಭಾ ಕರಂದ್ಲಾಜೆ(ಬಿಜೆಪಿ) ರಾಜೀವ್ ಗೌಡಬೆಂಗಳೂರು ಕೇಂದ್ರ : ಪಿ.ಸಿ.ಮೋಹನ್(ಬಿಜೆಪಿ) ಮನ್ಸೂರ್ ಆಲಿಖಾನ್ಬೆಂಗಳೂರು ದಕ್ಷಿಣ : ತೇಜಸ್ವಿ ಸೂರ್ಯ(ಬಿಜೆಪಿ) ಸೌಮ್ಯ ರೆಡ್ಡಿಚಿಕ್ಕಬಳ್ಳಾಪುರ : ಡಾ.ಕೆ.ಸುಧಾಕರ್ (ಬಿಜೆಪಿ) ರಕ್ಷಾ ರಾಮಯ್ಯಕೋಲಾರ : ಎಂ.ಮಲ್ಲೇಶ್ ಬಾಬು( ಜೆಡಿಎಸ್) ಕೆ.ವಿ.ಗೌತಮ್
eesanje/url_46_191_9.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ತೆರಿಗೆ ಭಯೋತ್ಪಾದನೆಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಮಾ.30-ರಾಷ್ಟ್ರದಲ್ಲಿ ತೆರಿಗೆ ಭಯೋತ್ಪಾದನೆಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂಬ ಭ್ರಮೆಯಲ್ಲಿ ಬಿಜೆಪಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಬಿಜೆಪಿಯು ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
3
+ ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ಧ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದು ವ್ಯಂಗ್ಯವಾಡಿದ್ದಾರೆ.
4
+ ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವ ಆರೋಪ ಹೊರಿಸಿ 1823 ಕೋಟಿ ರೂ. ಪಾವತಿಸುವಂತೆ ಐಟಿ ಇಲಾಖೆ ನೋಟೀಸ್ ನೀಡಿದೆ. 2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ 4.5 ಲಕ್ಷ ರೂ. ಮತ್ತು ವಿಳಾಸವೇ ಇಲ್ಲದ 1297 ದಾನಿಗಳಿಂದ 42 ಕೋಟಿ ರೂ. ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ. ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ 4263 ಕೋಟಿ ರೂ. ಪಾವತಿಸಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
5
+ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅತಿಕ್ರಿಯಾಶಾಲಿಯಾಗಿರುವ ಐಟಿ ಇಲಾಖೆ ಟಿಎಂಸಿ, ಸಿಪಿಐ ಸೇರಿದಂತೆ ಬೇರೆ ವಿರೋಧಪಕ್ಷಗಳ ಮೇಲೆಯೂ ತೆರಿಗೆ ಭಯೋತ್ಪಾದನೆಯ ಅಸ್ತ್ರ ಪ್ರಯೋಗ ಮಾಡಿದೆ. ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು ಎನ್ನುವುದನ್ನು ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ ಎಂದಿದ್ದಾರೆ.
6
+ ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಡೈರಿಗಳಾಗಲಿ, ಪ್ರಧಾನಿ ನರೇಂದ್ರಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ ಬಿರ್ಲಾ-ಸಹಾರಾ ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ ಎಂದು ಪ್ರಶ್ನಿಸಿದ್ದಾರೆ.
7
+ ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್‍ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಆಡಳಿತಾರೂಢ ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವ ಜೊತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
8
+ ಕಳೆದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂಪಾಯಿಯಷ್ಟು ಬ್ಯಾಂಕ್ ಸಾಲವನ್ನು ಮನ್ನಾ ಮಾಡಿರುವ ಬಿಜೆಪಿ ಸರ್ಕಾರ ಅವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗುತ್ತದೆ ಎಂದರು.
9
+ ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್‍ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ ಎಂದು ಆರೋಪಿಸಿದ್ದಾರೆ.
10
+ ಬಿಜೆಪಿ ಎಂದರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್ ಮೆಶೀನ್ ಆಗಿದೆ. ಭ್ರಷ್ಟರು ತಾವು ಮಾಡಿದ ಮಹಾಪಾಪಗಳ ಮೇಲಿನ ತನಿಖೆಯಿಂದ ತಪ್ಪಿಸಿಕೊಳ್ಳಬೇಕಾದರೆ, ಶಿಕ್ಷೆಯಿಂದ ಪಾರಾಗಬೇಕಾದರೆ ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂತಾನೇ ಶುದ್ಧವಾಗುತ್ತದೆ. ಅಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು. ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ. ಯಾವ ತನಿಖಾ ಸಂಸ್ಥೆಯೂ ಹುಡುಕಿಕೊಂಡು ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
11
+ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮತ್ತು ಅಧಿಕಾರವನ್ನು ಉಳಿಸಿಕೊಂಡಿದ್ದೇ ಇಂತಹ ಕಳ್ಳ-ಖದೀಮರ ಲೂಟಿಯ ಹಣದಿಂದ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕದಲ್ಲಿ ನಡೆಸುತ್ತಾ ಬಂದ ಆಪರೇಷನ್ ಕಮಲ ಎಂದಿದ್ದಾರೆ. ದೇಶದಲ್ಲಿ 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಎದೆ ತಟ್ಟಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರಮೋದಿಯವರು ವಿರೋಧಪಕ್ಷಗಳನ್ನು ಹಣಿಯಲು ಈ ರೀತಿಯ ಅಕ್ರಮ ಕೃತ್ಯಗಳಿಗೆ ಇಳಿದಿರುವುದನ್ನು ನೋಡಿದರೆ ಅವರಿಗೆ ಗೋಡೆ ಮೇಲಿನ ಬರಹ ಸ್ಪಷ್ಟವಾಗಿ ಕಾಣತೊಡಗಿದೆ ಎಂದರ್ಥ. ಅರಸನ ಮೈಮೇಲಿನ ಬಟ್ಟೆ ಒಂದೊಂದಾಗಿ ಕಳಚಿ ಬೀಳುತ್ತಿದೆ. ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ ಮತ್ತು ಅದರ ತಥಾಕಥಿತ ನಾಯಕರೆಲ್ಲರೂ ಬೆತ್ತಲೆಯಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
eesanje/url_46_192_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೊನೆಗೂ ಕೋಲಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಕಣಕ್ಕೆ
2
+ ಬೆಂಗಳೂರು,ಮಾ.30-ತೀವ್ರ ಹಗ್ಗಾಟ ಜಗ್ಗಾಟದ ಬಳಿಕ ಕೊನೆಗೂ ಕಾಂಗ್ರೆಸ್ ಕೋಲಾರ ಕ್ಷೇತ್ರಕ್ಕೆ ಪರ್ಯಾಯ ಅಭ್ಯರ್ಥಿಯನ್ನಾಗಿ ಕೆ.ವಿ.ಗೌತಮ್ ಅವರನ್ನು ಕಣಕ್ಕಿಳಿಸಿದೆ. ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಿರ್ಣಯದ ಪ್ರಕಾರ ಇಂದು ಕೋಲಾರ ಮೀಸಲು ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
3
+ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮೊದಲ ಹಂತದಲ್ಲಿ ಏಳು ಕ್ಷೇತ್ರಗಳಿಗೆ, 2ನೇ ಹಂತದಲ್ಲಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಬಾಕಿ ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಕೋಲಾರ ಕಗ್ಗಂಟಾಗಿ ಪರಿಣಮಿಸಿತು. ಅದನ್ನು ಹೊರತುಪಡಿಸಿ ನಿನ್ನೆ ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ, ಚಾಮರಾಜನಗರಕ್ಕೆ ಸಚಿವ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್, ಬಳ್ಳಾರಿಗೆ ಇ.ತುಕಾರಾಂ ಅವರುಗಳನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿತ್ತು.
4
+ ಕೋಲಾರ ಜಿಲ್ಲೆಯಲ್ಲಿ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಮತ್ತು ಸಚಿವ ಕೆ.ಎಚ್.ಮುನಿಯಪ್ಪ ಅವರ ಬಣಗಳ ನಡುವೆ ಪೈಪೋಟಿಯಿಂದ ಈಗಾಗಲೇ ನಿರ್ಧರಿಸಲಾಗಿದ್ದ ಅಭ್ಯರ್ಥಿಯನ್ನು ತಡೆ ಹಿಡಿಯಲಾಯಿತು. ಸಚಿವ ಕೆ.ಎಚ್.ಮುನಿಯಪ್ಪ ತಾವು ಏಳು ಬಾರಿ ಕೋಲಾರದಿಂದ ಸಂಸದರಾಗಿದ್ದು, ಗೆಲ್ಲುವ ಎಲ್ಲ ಅನುಭವ ತಮಗಿದೆ. ಹೀಗಾಗಿ ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು.
5
+ ಜೊತೆಗೆ ರಾಜ್ಯದ ಐದು ಮೀಸಲು ಕ್ಷೇತ್ರಗಳ ಪೈಕಿ ಮೂರರಲ್ಲಿ ಬಲಗೈ ಸಮುದಾಯಕ್ಕೆ ಅವಕಾಶ ಕೊಟ್ಟಿದ್ದರೆ, ಚಿತ್ರದುರ್ಗದಲ್ಲಿ ಮಾತ್ರ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಲಾಗಿದೆ. ಕೋಲಾರದಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡದೆ ಇದ್ದರೆ ಸಾಮಾಜಿಕ ನ್ಯಾಯದ ಏರುಪೇರಾಗಲಿದೆ ಎಂಬ ಎಚ್ಚರಿಕೆ ನೀಡಿದ್ದರು.
6
+ ಕೆ.ಎಚ್.ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡುವುದನ್ನು ರಮೇಶ್‍ಕುಮಾರ್ ಬಣ ಪ್ರಬಲವಾಗಿ ವಿರೋಧಿಸಿತ್ತು. ಸಚಿವ ಡಾ.ಎಂ.ಸಿ.ಸುಧಾಕರ್, ಕೋಲಾರ ಶಾಸಕ ಕೊತ್ತನೂರು ಮಂಜು, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ವಿಧಾನಪರಿಷತ್ ಸದಸ್ಯರಾದ ನಜೀರ್ ಅಹಮ್ಮದ್, ಅನಿಲ್‍ಕುಮಾರ್ ಅವರು ರಾಜೀನಾಮೆಗೆ ಮುಂದಾಗುವ ಮೂಲಕ ಕಾಂಗ್ರೆಸ್ ಮೇಲೆ ಒತ್ತಡ ಹೇರಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಂಡಾಯಗಾರರ ಜೊತೆ ಸಂಧಾನ ಸಭೆ ನಡೆಸಿ ಎರಡೂ ಬಣ ಪ್ರತಿಪಾದಿಸುವವರಿಗೆ ಟಿಕೆಟ್ ನೀಡಲು ನಿರ್ಧರಿಸಿದರು.
7
+ ಪರ್ಯಾಯ ಅಭ್ಯರ್ಥಿಯನ್ನು ಘೋಷಿಸುತ್ತೇವೆ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಎಲ್ಲರದು ಎಂಬ ಸಂದೇಶ ರವಾನಿಸಿದರು. ಅಂತಿಮವಾಗಿ ಎಡಗೈ ಸಮುದಾಯಕ್ಕೆ ಸೇರಿದ ಕೆ.ವಿ.ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
8
+ ಸಚಿವ ಕೆ.ಎಚ್.ಮುನಿಯಪ್ಪ ಅವರ ಪ್ರಬ�� ಲಾಬಿಯನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. ಚಿಕ್ಕ ಪೆದ್ದಣ್ಣ ಸೇರಿದಂತೆ ಮುನಿಯಪ್ಪ ಕುಟುಂಬದ ಸದಸ್ಯರು ಅವಕಾಶ ವಂಚಿತರಾಗಿದ್ದಾರೆ. ಇದರ ನಡುವೆ ರಮೇಶ್‍ಕುಮಾರ್ ಅವರ ಬಣ ಪ್ರತಿಪಾದಿಸಿದ ಹಲವು ನಾಯಕರು ನಿರಾಶರಾಗಿದ್ದಾರೆ.
9
+ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‍ನ ಅಧ್ಯಕ್ಷರಾಗಿರುವ ಕೆ.ವಿ.ಗೌತಮ್ ಇಂಜಿನಿಯರ್ ಪದವೀಧರರಾಗಿದ್ದು, ಎನ್‍ಎಸ್‍ಯುಐ , ಯುವ ಕಾಂಗ್ರೆಸ್‍ನ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದು, ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ. ಸುಮಾರು 24 ವರ್ಷಗಳ ಕಾಲ ಕೆಲಸ ಮಾಡಿರುವ ಗೌತಮ್ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಇವರ ತಂದೆ ವಿಜಯಕುಮಾರ್ ಬೆಂಗಳೂರು ಮೇಯರ್ ಆಗಿಯೂ ಕೆಲಸ ಮಾಡಿದ್ದಾರೆ.
eesanje/url_46_192_10.txt ADDED
@@ -0,0 +1,6 @@
 
 
 
 
 
 
 
1
+ ಮುಂದಿನ 1 ವಾರ ರಾಜ್ಯದಲ್ಲಿ ಭಾರೀ ಬಿಸಿಲು, ಹವಾಮಾನ ಇಲಾಖೆಯ ಮುನ್ಸೂಚನೆ
2
+ ಬೆಂಗಳೂರು,ಮಾ.29-ರಾಜ್ಯದಲ್ಲಿ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಶಿಯಸ್ ಗಡಿ ದಾಟಿದೆ. ರಾಜ್ಯದಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್ ಗಡಿ ದಾಟಿದ್ದು, ಜನರು ತತ್ತರಿಸುವಂತೆ ಮಾಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಏ.4 ರವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆಗಳಿಲ್ಲ.
3
+ ಕಳೆದ ಒಂದು ವಾರದ ಹಿಂದೆ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗಿತ್ತು. ಆದರೂ ತಾಪಮಾನದಲ್ಲಿ ಯಾವುದೇ ಇಳಿಕೆ ಕಂಡುಬರಲಿಲ್ಲ. ಮುಂದಿನ ಒಂದು ವಾರದಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಶಿಯಸ್‍ನಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
4
+ ರಾಜಧಾನಿ ಬೆಂಗಳೂರಿನಲ್ಲೂ ಗರಿಷ್ಠ ತಾಪಮಾನ ಗಣನೀಯವಾಗಿ ಹೆಚ್ಚಳವಾಗಿದ್ದು, ಈಗಾಗಲೇ 36 ಡಿಗ್ರಿ ಸೆಲ್ಶಿಯಸ್ ಗಡಿ ದಾಟಿದೆ. ಬೆಂಗಳೂರಿನಲ್ಲಿ 36, ಬಾಗಲಕೋಟೆಯಲ್ಲಿ 40.6, ಕಲಬುರಗಿಯಲ್ಲಿ 40.9, ಹಾವೇರಿ 38.2, ವಿಜಯಪುರ 39, ಕೊಪ್ಪಳ 39.6, ರಾಯಚೂರು 38.8, ಮಂಡ್ಯ 37.4, ಮೈಸೂರು 36.1 ಡಿಗ್ರಿ ಸೆಲ್ಶಿಯಸ್‍ನಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ. ಹೀಗೆ ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಹೆಚ್ಚಳ ಕಂಡುಬರುತ್ತಿದೆ.
5
+ ಆದರೆ ಇದಕ್ಕಿಂತಲೂ ಹೆಚ್ಚಿನ ಪ್ರಮಾಣದ ತಾಪಮಾನ ರಾಜ್ಯದಲ್ಲಿ ದಾಖಲಾಗಿರುವ ನಿದರ್ಶನವಿದೆ. ಅಂದರೆ 1996 ರಲ್ಲಿ ಇದೇ ರೀತಿಯ ತಾಪಮಾನ ರಾಜ್ಯದಲ್ಲಿ ಕಂಡುಬಂದಿತ್ತು. ಆಗ ಬೆಂಗಳೂರಿನಲ್ಲಿ 37.3 ಡಿಗ್ರಿ ಸೆಲ್ಶಿಯಸ್, ಕಲಬುರಗಿಯಲ್ಲಿ 43, ಬಾಗಲಕೋಟೆಯಲ್ಲಿ 41.6, ವಿಜಯಪುರ 41.9, ರಾಯಚೂರು 44.6, ಬಳ್ಳಾರಿ 43, ಕೊಪ್ಪಳ 40.2 ಡಿಗ್ರಿ ಸೆಲ್ಶಿಯಸ್‍ನಷ್ಟು ಮಾರ್ಚ್ ಅಂತ್ಯದ ದಿನಗಳಲ್ಲಿ ಕಂಡುಬಂದಿತ್ತು.
6
+ ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟು ತೀವ್ರ ಬರಪರಿಸ್ಥಿತಿ ಉಂಟಾಗಿರುವುದರಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ, ಸಣ್ಣಪುಟ್ಟ ಕೆರೆಕಟ್ಟೆಗಳು ಬತ್ತಿ ಹೋಗಿವೆ, ಅಂತರ್ಜಲ ತೀವ್ರವಾಗಿ ಕುಸಿದಿವೆ. ಹೀಗಾಗಿ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ, ಉಷ್ಣಾಂಶ ಅಧಿಕವಾಗಿ ಬಿಸಿಲಿನ ತೀವ್ರತೆ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
eesanje/url_46_192_11.txt ADDED
@@ -0,0 +1,6 @@
 
 
 
 
 
 
 
1
+ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಕುರಿತು ಗೃಹಸಚಿವ ಪ್ರತಿಕ್ರಿಯೆ
2
+ ಬೆಂಗಳೂರು,ಮಾ.29-ನಗರದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿದ್ದು, ಸದ್ಯದ ಹಂತದಲ್ಲಿ ಯಾವುದನ್ನೂ ಬಹಿರಂಗಪಡಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‍ಐಎ ಮತ್ತು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕೆಲವು ಮಾಹಿತಿಗಳಿವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
3
+ ರಾಜ್ಯದಲ್ಲಿ ಬಾಕಿ ಇರುವ ನಾಲ್ಕು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಎರಡು ದಿನದ ಒಳಗಾಗಿ ಅಭ್ಯರ್ಥಿಗಳನ್ನು ಘೋಷಿಸಲಿದೆ. ಚುನಾವಣೆ ಎಂದ ಮೇಲೆ ಒಂದೆರಡು ಕ್ಷೇತ್ರಗಳಲ್ಲಿ ಸಂಘರ್ಷ ಇದ್ದೇ ಇರುತ್ತದೆ. ಹಾಗಾಗಿ ಕೋಲಾರ ಒಂದೆರಡು ಮೂರು ಕ್ಷೇತ್ರಗಳಲ್ಲಿ ಪೈಪೋಟಿ ಸಹಜ ಎಂದರು.
4
+ ನಿನ್ನೆ ರಾತ್ರಿ ನಡೆದ ಚರ್ಚೆಯಲ್ಲಿ ನಾನೂ ಕೂಡಾ ಭಾಗವಹಿಸಿದ್ದೆ. ಬಹುತೇಕ ಎಲ್ಲವೂ ಅಂತಿಮಗೊಂಡಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಎಲ್ಲರೂ ಭರವಸೆ ನೀಡಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಪ್ರಕಟಗೊಳ್ಳಲಿದೆ ಎಂದು ಹೇಳಿದರು.
5
+ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ನಾನಾ ರೀತಿಯ ವ್ಯಾಖ್ಯಾನಗಳಾಗಬಹುದು. ಆದರೆ ಜನ ಯಾರಿಗೆ ಮತ ಹಾಕಬೇಕು ಎಂದು ತೀರ್ಮಾನಿಸಲಿದ್ದಾರೆ. ಕೆಲವರು ಮುಂಗಡವಾಗಿಯೇ ನಿರ್ಧಾರ ತೆಗೆದುಕೊಂಡರೆ ಇನ್ನೂ ಕೆಲವರು ವ್ಯಕ್ತಿ ಹಾಗೂ ಪರಿಸ್ಥಿತಿಯನ್ನು ಆಧರಿಸಿ ಕೊನೆಕ್ಷಣದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ.
6
+ ಪಕ್ಷದ ಕಾರಣಕ್ಕಾಗಿ ಬಹಳಷ್ಟು ಮಂದಿ ಕಟಿಬದ್ಧರಾಗಿರುತ್ತಾರೆ. ಅದಕ್ಕೆ ಧಕ್ಕೆಯಾದಾಗ, ಸಿದ್ಧಾಂತದ ದಾರಿ ತಪ್ಪಿದಾಗ ಅನ್ಯಪಕ್ಷಗಳಿಗೆ ವಲಸೆ ಹೋಗುವುದು ಸಾಮಾನ್ಯ. ಅದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್-ಬಿಜೆಪಿಯ ಅಭ್ಯರ್ಥಿಗಳು ಕಾಂಗ್ರೆಸ್‍ನತ್ತ ವಲಸೆ ಬರುತ್ತಿದ್ದಾರೆ ಎಂದು ಹೇಳಿದರು.
eesanje/url_46_192_12.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಕಳೆದ ಬಾರಿ ರಾಜ್ಯದಲ್ಲಿ ಕಣಕ್ಕಿಳಿದು ಠೇವಣಿ ಕಳೆದುಕೊಂಡವರೆಷ್ಟು..?
2
+ ಬೆಂಗಳೂರು,ಮಾ.29-ರಾಜ್ಯದಲ್ಲಿ ಲೋಕಸಮರದ ಅಖಾಡ ರಂಗೇರುತ್ತಿದೆ. ಈಗಾಗಲೇ ಮೈತ್ರಿ ಪಕ್ಷ ಬಿಜೆಪಿ-ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಲೋಕಸಮರದ ಗೆಲುವಿಗಾಗಿ ತಮ್ಮದೇ ರಣತಂತ್ರ ರೂಪಿಸುತ್ತಿವೆ. ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 478 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಆದರೆ ಇದರಲ್ಲಿ ಬಹುತೇಕರು ಠೇವಣಿ ಕಳೆದುಕೊಂಡಿದ್ದೇ ಹೆಚ್ಚು.
3
+ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಘೋಷಣೆಯ ಪ್ರಕ್ರಿಯೆಯಲ್ಲಿ ತೊಡಗಿವೆ. ರಾಜ್ಯದಲ್ಲೂ 28 ಕ್ಷೇತ್ರಗಳಲ್ಲಿ ಲೋಕ ಸಮರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಬಾರಿಯೂ ರಾಜ್ಯದಲ್ಲಿ ದ್ವಿಪಕ್ಷೀಯ ಹೋರಾಟ ಗೋಚರಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದೆ. ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮತ್ತು ಬಿಜೆಪಿ ನಡುವೆ ಚುನಾವಣಾ ಹೋರಾಟ ನಡೆದಿತ್ತು.
4
+ 2019ರಲ್ಲಿ ರಾಜ್ಯದಲ್ಲಿ ನಡೆದ ಲೋಕ ಸಮರದಲ್ಲಿ ಬಿಜೆಪಿ 25 ಸ್ಥಾನ ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನ ಹಾಗೂ ಒಂದು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಕಳೆದ ಬಾರಿ ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಹಲವು ಅಭ್ಯರ್ಥಿಗಳು ಸ್ಪರ್ಧೆಗೆ ಇಳಿದಿದ್ದರು. ರಾಜ್ಯದ 28 ಕ್ಷೇತ್ರಗಳಲ್ಲಿ ಕಳೆದ ಬಾರಿ ಒಟ್ಟು 478 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಈ ಪೈಕಿ ಶೇ.88 ಅಭ್ಯರ್ಥಿಗಳು ತಮ್ಮ ಠೇವಣಿ ಕಳೆದುಕೊಂಡಿದ್ದಾರೆ.
5
+ ಠೇವಣಿ ಮುಟ್ಟುಗೋಲು ಎಂದರೇನು?:ಲೋಕಸಭೆ ಚುನಾವಣೆಗೆ ಸ್ರ್ಪಧಿಸುವ ಪ್ರತೀ ಅಭ್ಯರ್ಥಿ ಭದ್ರತಾ ಠೇವಣಿ ಮೊತ್ತವನ್ನು ನಾಮಪತ್ರ ಸಲ್ಲಿಕೆ ವೇಳೆ ಕ್ಷೇತ್ರದ ಚುನಾವಣಾಕಾರಿಗೆ ಪಾವತಿಸಬೇಕು. ಪ್ರತೀ ಅಭ್ಯರ್ಥಿ 25 ಸಾವಿರ ರೂ. ಭದ್ರತಾ ಠೇವಣಿ ಇಡಬೇಕು.
6
+ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ 25,000 ರೂ. ಭದ್ರತಾ ಠೇವಣಿ ಪಾವತಿಸಬೇಕು. ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳು 12,500 ರೂ. ಠೇವಣಿ ಪಾವತಿಸಬೇಕು. ಅಭ್ಯರ್ಥಿ ತಾನು ಸ್ರ್ಪಧಿಸಿರುವ ಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟು ಅರ್ಹ ಮತಗಳ 1/6ಗಿಂತ ಹೆಚ್ಚಿಗೆ ಮತ ಗಳಿಸಬೇಕು. ಅಷ್ಟು ಮತಗಳಿಸಿದರೆ ಚುನಾವಣಾಧಿಕಾರಿಗೆ ಪಾವತಿಸಿದ ಠೇವಣಿ ಹಣ ಅಭ್ಯರ್ಥಿಗೆ ಮರಳಿಸಲಾಗುತ್ತದೆ.
7
+ ಒಂದು ವೇಳೆ ಅಭ್ಯರ್ಥಿ 1/6ಕ್ಕಿಂತ ಕಡಿಮೆ ಮತಗಳಿಸಿದರೆ, ಆತನ ಠೇವಣಿಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕುತ್ತದೆ. ಅಂದರೆ, ಠೇವಣಿ ಮೊತ್ತವನ್ನು ಅಭ್ಯರ್ಥಿಗಳಿಗೆ ಮರುಪಾವತಿಸುವುದಿಲ್ಲ. ಅಭ್ಯರ್ಥಿಯೊಬ್ಬನ ಚುನಾವಣಾ ಠೇವಣಿ ಮುಟ್ಟುಗೋಲಾದರೆ ಆತನನ್ನು ಕ್ಷೇತ್ರದ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎಂದು ಅರ್ಥ. ಆತ ಹೀನಾಯ ಸೋಲು ಕಂಡಿದ್ದಾನೆ ಎಂಬುದು ಗೊತ್ತಾಗುತ್ತದೆ.
8
+ ರಾಜ್ಯದಲ್ಲಿ ಠೇವಣಿ ಕಳೆದುಕೊಂಡವರೆಷ್ಟು?:2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಒಟ್ಟು 478 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಈ ಪೈಕಿ 422 ಅಭ್ಯರ್ಥಿಗಳು ತಮ್ಮ ಠೇವಣಿ ಕಳೆದುಕೊಂಡಿದ್ದಾರೆ. ಅಂದರೆ, ಸ್ಪರ್ಧಿಸಿದ ಅಭ್ಯರ್ಥಿಗಳಲ್ಲಿ ಶೇ.88ರಷ್ಟು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
9
+ ಚುನಾವಣಾ ಆಯೋಗದ ಅಂಕಿ ಅಂಶದಂತೆ ರಾಜ್ಯದಲ್ಲಿ ಲೋಕಸಮರದ ವೇಳೆ ಸ್ರ್ಪಸಿದ್ದ 78 ವಿವಿಧ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ಪೈಕಿ 30 ಮಂದಿ ತಮ್ಮ ಠೇವಣಿ ಕಳೆದುಕೊಂಡಿದ್ದಾರೆ. ಮಾನ್ಯತೆ ಪಡೆದ, ದಾಯಿತವಲ್ಲದ ಪಕ್ಷಗಳಿಂದ ಕಣಕ್ಕಿಳಿದಿದ್ದ ಎಲ್ಲಾ 128 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಇನ್ನು ಕಣದಲ್ಲಿ ನಿಂತಿದ್ದ 265 ಪಕ್ಷೇತರ ಅಭ್ಯರ್ಥಿಗಳ ಪೈಕಿ 264 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು.
10
+ ಕ್ಷೇತ್ರವಾರು ಠೇವಣಿ ಮುಟ್ಟುಗೋಲು ಎಷ್ಟಿದೆ?:ಚಿಕ್ಕೋಡಿ ಕ್ಷೇತ್ರದಲ್ಲಿ ಕಳೆದ ಲೋಕಸಮರದ ವೇಳೆ ಒಟ್ಟು 11 ಅಭ್ಯರ್ಥಿಗಳು ಸ್ರ್ಪಸಿದ್ದರು. ಈ ಪೈಕಿ 9 ಅಭ್ಯರ್ಥಿಗಳ ಠೇವಣಿ ಮುಟ್ಟುಗೋಲಾಗಿದೆ. ಇನ್ನು ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 57 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 55 ಮಂದಿ ಠೇವಣಿ ಕಳೆದುಕೊಂಡಿದ್ದರು. ಬಾಗಲಕೋಟೆ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳ ಪೈಕಿ 12 ಮಂದಿ ಠೇವಣಿ ಕಳೆದುಕೊಂಡಿದ್ದರು. ಬಿಜಾಪುರ (ಎಸ್‍ಸಿ) ಕ್ಷೇತ್ರದಲ್ಲಿ ನಿಂತಿದ್ದ 12 ಅಭ್ಯರ್ಥಿಗಳಲ್ಲಿ 10 ಮಂದಿಯ ಠೇವಣಿ ಮುಟ್ಟುಗೋಲಾಗಿದೆ. ಗುಲ್ಬರ್ಗಾ (ಎಸ್‍ಸಿ) ಕ್ಷೇತ್ರದಲ್ಲಿ 12 ಅಭ್ಯರ್ಥಿಗಳ ಪೈಕಿ 10 ಮಂದಿ ಠೇವಣಿ ಕಳೆದುಕೊಂಡಿದ್ದರು.
11
+ ರಾಯಚೂರು (ಎಸ್‍ಟಿ) ಕ್ಷೇತ್ರದಲ್ಲಿ ಕಣದಲ್ಲಿದ್ದ 5 ಅಭ್ಯರ್ಥಿಗಳಲ್ಲಿ 3 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು. ಬೀದರ್ ಕ್ಷೇತ್ರದಲ್ಲಿ ಕಣದಲ್ಲಿದ್ದ 22 ಅಭ್ಯರ್ಥಿಗಳ ಪೈಕಿ 20 ಮಂದಿ ಠೇವಣಿ ಕಳೆದುಕೊಂಡಿದ್ದರು. ಕೊಪ್ಪಳ ಕ್ಷೇತ್ರದಲ್ಲಿನ 14 ಅಭ್ಯರ್ಥಿಗಳಲ್ಲಿ 12 ಮಂದಿ ಠೇವಣಿ ಕಳೆದುಕೊಂಡಿದ್ದರು. ಬಳ್ಳಾರಿ (ಎಸ್‍ಟಿ) ಕ್ಷೇತ್ರದಲ್ಲಿ ನಿಂತಿದ್ದ 11 ಅಭ್ಯರ್ಥಿಗಳಲ್ಲಿ 9 ಅಭ್ಯರ್ಥಿಗಳ ಠೇವಣಿ ಮುಟ್ಟುಗೋಲಾಗಿದೆ.
12
+ ಹಾವೇರಿ ಕ್ಷೇತ್ರದಲ್ಲಿ ಕಣದಲ್ಲಿದ್ದ 10 ಅಭ್ಯರ್ಥಿಗಳ ಪೈಕಿ 8 ಅಭ್ಯರ್ಥಿಗಳ ಠೇವಣಿ ಮುಟ್ಟುಗೋಲಾಗಿದೆ. ಧಾರವಾಡ ಕ್ಷೇತ್ರದಲ್ಲಿ ಕಣದಲ್ಲಿದ್ದ 19 ಅಭ್ಯರ್ಥಿಗಳ ಪೈಕಿ 17 ಮಂದಿ ಠೇವಣಿ ಕಳೆದುಕೊಂಡಿದ್ದರು. ಉತ್ತರ ಕನ್ನಡ ಕ್ಷೇತ್ರದಲ್ಲಿ ಕಣದಲ್ಲಿದ್ದ 13 ಅಭ್ಯರ್ಥಿಗಳ ಪೈಕಿ 11 ಮಂದಿ ಠೇವಣಿ ಕಳೆದುಕೊಂಡಿದ್ದರು. ದಾವಣಗೆರೆ ಕ್ಷೇತ್ರದಲ್ಲಿ ಕಣದಲ್ಲಿದ್ದ 25 ಅಭ್ಯರ್ಥಿಗಳ ಪೈಕಿ 23 ಮಂದಿ ಠೇವಣಿ ಕಳೆದುಕೊಂಡಿದ್ದರು. ಶಿವಮೊಗ್ಗ ಕ್ಷೇತ್ರದಲ್ಲಿ ಕಣದಲ್ಲಿದ್ದ 12 ಅಭ್ಯರ್ಥಿಗಳ ಪೈಕಿ 10 ಮಂದಿ ಠೇವಣಿ ಕಳೆದುಕೊಂಡಿದ್ದರು.
13
+ ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಣದಲ್ಲಿದ್ದ 12 ಅಭ್ಯರ್ಥಿಗಳ ಪೈಕಿ 10 ಮಂದಿ ಠೇವಣಿ ಕಳೆದುಕೊಂಡಿದ್ದರು. ಹಾಸನ ಕ್ಷ���ತ್ರದಲ್ಲಿ ಕಣದಲ್ಲಿದ್ದ 6 ಅಭ್ಯರ್ಥಿಗಳ ಪೈಕಿ 4 ಮಂದಿ ಠೇವಣಿ ಕಳೆದುಕೊಂಡಿದ್ದರು. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಣದಲ್ಲಿದ್ದ 13 ಅಭ್ಯರ್ಥಿಗಳ ಪೈಕಿ 11 ಮಂದಿ ಠೇವಣಿ ಕಳೆದುಕೊಂಡಿದ್ದರು. ಚಿತ್ರದುರ್ಗ (ಎಸ್‍ಸಿ) ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 17 ಮಂದಿ ಠೇವಣಿ ಕಳೆದುಕೊಂಡಿದ್ದರು.
14
+ ತುಮಕೂರು ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 13 ಮಂದಿ ಠೇವಣಿ ಕಳೆದುಕೊಂಡಿದ್ದರು. ಮಂಡ್ಯ ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 20 ಮಂದಿ ಠೇವಣಿ ಕಳೆದುಕೊಂಡಿದ್ದರು. ಮೈಸೂರು ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 20 ಮಂದಿ ಠೇವಣಿ ಕಳೆದುಕೊಂಡಿದ್ದರು. ಚಾಮರಾಜನಗರ (ಎಸ್‍ಸಿ) ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 8 ಮಂದಿ ಠೇವಣಿ ಕಳೆದುಕೊಂಡಿದ್ದರು.
15
+ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಣದಲ್ಲಿದ್ದ 15 ಅಭ್ಯರ್ಥಿಗಳ ಪೈಕಿ 13 ಮಂದಿ ಠೇವಣಿ ಕಳೆದುಕೊಂಡಿದ್ದರು. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣದಲ್ಲಿದ್ದ 31 ಅಭ್ಯರ್ಥಿಗಳ ಪೈಕಿ 29 ಮಂದಿ ಠೇವಣಿ ಕಳೆದುಕೊಂಡಿದ್ದರು. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಕಣದಲ್ಲಿದ್ದ 22 ಅಭ್ಯರ್ಥಿಗಳ ಪೈಕಿ 20 ಮಂದಿ ಠೇವಣಿ ಕಳೆದುಕೊಂಡಿದ್ದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಣದಲ್ಲಿದ್ದ 25 ಅಭ್ಯರ್ಥಿಗಳ ಪೈಕಿ 23 ಮಂದಿ ಠೇವಣಿ ಕಳೆದುಕೊಂಡಿದ್ದರು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಣದಲ್ಲಿದ್ದ 15 ಅಭ್ಯರ್ಥಿಗಳ ಪೈಕಿ 13 ಮಂದಿ ಠೇವಣಿ ಕಳೆದುಕೊಂಡಿದ್ದರು. ಕೋಲಾರ (ಎಸ್‍ಸಿ) ಕ್ಷೇತ್ರದಲ್ಲಿ ಕಣದಲ್ಲಿದ್ದ 14 ಅಭ್ಯರ್ಥಿಗಳ ಪೈಕಿ 12 ಮಂದಿ ಠೇವಣಿ ಕಳೆದುಕೊಂಡಿದ್ದರು.
eesanje/url_46_192_2.txt ADDED
@@ -0,0 +1,6 @@
 
 
 
 
 
 
 
1
+ ಬಿಜೆಪಿ ಸ್ಟಾರ್ ಕ್ಯಾಂಪೇನರ್‌ಗಳ ಪಟ್ಟಿ ಬಿಡುಗಡೆ: ಬಿ.ಎಲ್.ಸಂತೋಷ್‌ ಹಾಗೂ ಈಶ್ವರಪ್ಪಗಿಲ್ಲ ಸ್ಟಾರ್ ಪಟ್ಟ
2
+ ಬೆಂಗಳೂರು,ಮಾ.30-ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸ್ಟಾರ್ ಕ್ಯಾಂಪೇನರ್‍ಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ. ಬಿಜೆಪಿ ವರಿಷ್ಠ ನಾಯಕರ ಜೊತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 40 ನಾಯಕರ ಪಟ್ಟಿ ಬಿಡುಗಡೆ ಆಗಿದೆ. ಬಿ.ಎಲ್.ಸಂತೋಷ್ ಅವರನ್ನು ಪಟ್ಟಿಯಿಂದ ಹೊರಗಿಟ್ಟಿದ್ದು, ಯಡಿಯೂರಪ್ಪ ಅಭ್ಯರ್ಥಿಗಳ ಆಯ್ಕೆಯಂತೆ ತಾರಾ ಪ್ರಚಾರಕರ ಪಟ್ಟಿಯಲ್ಲೂ ಮೇಲುಗೈ ಸಾಧಿಸಿದ್ದಾರೆ.
3
+ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಸ್ಸೋಂ ಮುಖ್ಯಮಂತ್ರಿ ಹೇಮಂತ ಬಿಸ್ವಾ ಶರ್ಮ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್, ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ, ಯಡಿಯೂರಪ್ಪ ಸೇರಿದಂತೆ ರಾಜ್ಯದ ನಾಲ್ವರು ಮಾಜಿ ಸಿಎಂಗಳು ಹಾಗೂ ಟಿಕೆಟ್ ಕೈತಪ್ಪಿದ ನಳೀನ್‍ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಎ.ನಾರಾಯಣಸ್ವಾಮಿ, ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರೀತಂಗೌಡ ಸೇರಿದಂತೆ 40 ಮಂದಿ ಸ್ಟಾರ್ ಕ್ಯಾಂಪೇನರ್‍ಗಳಾಗಿ ಆಯ್ಕೆಯಾಗಿದ್ದಾರೆ.
4
+ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಜೈ ಶಂಕರ್, ನಿರ್ಮಲಾ ಸೀತಾರಾಮನ್, ಸ್ಮತಿ ಇರಾನಿ ಜೊತೆಗೆ ಬಿಜೆಪಿ ಅಭ್ಯರ್ಥಿಗಳಾಗಿರುವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿ.ಶ್ರೀರಾಮುಲು ಕೂಡ ಸ್ಟಾರ್ ಕ್ಯಾಂಪೆನರ್‍ಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
5
+ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಿ. ವಿ ರಾಜೇಶ್, ಸಂಘಟನೆಯಲ್ಲಿರುವ ಸುನೀಲ್ ಕುಮಾರ್‍ಗೆ ಅವಕಾಶ ನೀಡಲಾಗಿದೆ.
6
+ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಿಂದ ದೂರ ಇಡಲಾಗಿದ್ದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್ ಸಂತೋಷ್?ಗೆ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿಲ್ಲ. ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಕೆ.ಎಸ್.ಈಶ್ವರಪ್ಪಗೂ ಸಹ ಕೋಕ್ ನೀಡಲಾಗಿದೆ. ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿಗೂ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ.
eesanje/url_46_192_3.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ : ವಿಜಯೇಂದ್ರ
2
+ ಬೆಂಗಳೂರು,ಮಾ.29-ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ವಿಶ್ವಾಸದಿಂದ ಕೆಲಸ ಮಾಡಿದರೆ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
3
+ ಮೈತ್ರಿ ಪಕ್ಷಗಳ ಸಮನ್ವಯ ಸಭೆ ಸಂದರ್ಭದಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಬಹಳ ಹಿಂದೆನೇ ಆಗಬೇಕಿತ್ತು. ಕಾರಣಾಂತರದಿಂದ ಸಭೆ ಇಂದು ನಿರ್ಧಾರವಾಗಿದೆ. ದೇಶದ ಭವಿಷ್ಯ ರೂಪಿಸುವ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಒಂದೇ ವೇದಿಕೆಗೆ ಬಂದಿದ್ದೇವೆ ಎಂದರು.
4
+ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿಗೆ ಆನೆಬಲ ಬಂದಂತೆ ಆಗಿದೆ. ಮಂಡ್ಯ ಹಾಗೂ ಮೈಸೂರಲ್ಲಿ ನಾನು, ಕುಮಾರಸ್ವಾಮಿ ಜಂಟಿ ಪ್ರವಾಸ ಮಾಡಿದ್ದೇವೆ. ಬಹಳಷ್ಟು ಸಲ ಹೊಂದಾಣಿಕೆ ರಾಜಕೀಯ ನಡೆದಿದೆ. ಬಿಜೆಪಿ-ಜೆಡಿಎಸ್ ಹಾಗೂ ಜೆಡಿಎಸ್-ಕಾಂಗ್ರೆಸ್ ಸಾಕಷ್ಟು ಸಲ ಹೊಂದಾಣಿಕೆಯಾಗಿದೆ. ಈ ಸಮ್ಮಿಲನ ರಾಜ್ಯದ ಜನರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದರು.
5
+ ಬಿಜೆಪಿ-ಜೆಡಿಎಸ್ ಸಮ್ಮಿಲನದಿಂದ ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಕೆಲಸ ಆಗುತ್ತದೆ. ಜೆಡಿಎಸ್-ಎನ್ಡಿಎ ಕೂಟಕ್ಕೆ ಬಂದಿರುವುದನ್ನು ನಮ್ಮ ನಾಯಕರು ಘೋಷಣೆ ಮಾಡಿ ಹಲವು ತಿಂಗಳು ಆಗಿವೆ. ರಾಜ್ಯದ ಮತದಾರರು ಮೈತ್ರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
6
+ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಬೇಕು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, 28 ಕ್ಷೇತ್ರಗಳಲ್ಲೂ ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಷ್ಠೆ ಬದಿಗಿಟ್ಟು ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.
7
+ ಈ ಹಿಂದೆ ಬಿಎಸ್ವೈ ಜೊತೆ ಸರ್ಕಾರ ಮಾಡಿದ್ದಾಗ ಒಳ್ಳೆಯ ಆಡಳಿತ ಕೊಟ್ಟಿದ್ದೆವು. ಕೆಲವು ಪರಿಸ್ಥಿತಿಗಳಲ್ಲಿ ಮೈತ್ರಿ ಮುಂದುವರೆಯಲು ಸಾಧ್ಯವಾಗಲಿಲ್ಲ. ಆಗ ನಮ್ಮ ತಂದೆಯವರಿಗೆ ಕೆಲವರು ತಪ್ಪು ಮಾಹಿತಿ ನೀಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಬಾರೀ ನಾವು ಮೈತ್ರಿ ಮಾಡಿಕೊಂಡಿದ್ದರೆ ರಾಜ್ಯದಲ್ಲಿ ಈಗ ಕಾಂಗ್ರೆಸ್ ಬರಲು ಸಾಧ್ಯವಾಗುತ್ತಿರಲಿಲ್ಲ.
8
+ ನಮ್ಮಲ್ಲಿದ್ದ ಒಡಕುಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಪ್ರತಿದಿನ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷ ಮುಗಿದೆ ಹೋಯಿತು ಎಂದು ಮಾತನಾಡುತ್ತಿದ್ದಾರೆ. ದೇಶದ ಭದ್ರತೆಗೆ ಮೋದಿಯವರ ದುಡಿಮೆ ನೋಡಿದ್ದೇವೆ. ಅಮಿತ್ ಶಾ ಅವರ ಮಧ್ಯಸ್ಥಿಕೆಯಿಂದ ಈ ಮೈತ್ರಿಯಾಗಿದೆ. ಅಭ್ಯರ್ಥಿ ಆಯ್ಕೆಯಲ್ಲಿ ಒಡಕು ಬಂದಿರಬಹುದು, ಅದರಿಂದಾಗಿ ತಾವು ನಿರಾಸೆ ಒಳಗಾದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಕೆಲವೊಂದು ಕ್ಷೇತ್ರಗಳಲ್ಲಿ ಭಿನ್ನಾಭಿಪ್ರಾಯ ಇದ್ದಾವೆ. ಅದನ್ನು ಸರಿಪಡಿಸಿಕೊಳ್ಳಬೇಕಿದೆ ಎಂದರು.
eesanje/url_46_192_4.txt ADDED
@@ -0,0 +1,8 @@
 
 
 
 
 
 
 
 
 
1
+ ಕಾಂಗ್ರೆಸ್ ಹೊಣೆಗಾರಿಕೆಗಳಿಗೆ ವೀಣಾ ಕಾಶಪ್ಪನವರ್ ರಾಜೀನಾಮೆ
2
+ ಬೆಂಗಳೂರು,ಮಾ.29-ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಆದರೆ ಸಂಘಟನಾತ್ಮಕ ಎಲ್ಲಾ ಜವಾಬ್ದಾರಿಗಳಿಗೂ ರಾಜೀನಾಮೆ ನೀಡುತ್ತೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಬಗ್ಗೆ ಎರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಕ್ರೀನಿಂಗ್ ಕಮಿಟಿವರೆಗೂ ನನ್ನ ಹೆಸರಿತ್ತು. ಅಜಯ್ಕುಮಾರ್ ಸರ್ನಾಯಕ್ ಮತ್ತು ನನ್ನ ಹೆಸರಿಗೆ ಮಾತ್ರ ಬೆಂಬಲ ನೀಡಿದ್ದಾಗಿ ಜಿಲ್ಲೆಯ ಶಾಸಕರು ತಿಳಿಸಿದ್ದರು. ಆದರೆ ಹೈಕಮಾಂಡ್ನ ಸಭೆಗೆ ನನ್ನ ಹೆಸರು ಹೋಗಿಲ್ಲ. ಇದರ ಹಿಂದೆ ಷಡ್ಯಂತ್ರ ಇರುವುದು ಸ್ಪಷ್ಟವಾಗಿ ಕಾಣುತ್ತಿದೆ. ಎಂದು ಆರೋಪಿಸಿದರು.
4
+ ಪಂಚಮಸಾಲಿ ಸಮುದಾಯದ ಹೆಣ್ಣುಮಗಳು ಪ್ರಬಲವಾಗಿ ಬೆಳೆಯುವುದನ್ನು ಕೆಲವರಿಗೆ ಸಹಿಸಿಕೊಳ್ಳಲಾಗಿಲ್ಲ. ಕಾಂಗ್ರೆಸ್ನ ಘೋಷಿತ ಅಭ್ಯರ್ಥಿ ಸಂಯುಕ್ತ ಪಾಟೀಲ್ ನೆರೆಯ ಬಿಜಾಪುರ ಜಿಲ್ಲೆಯವರು. ಆಕೆಯ ಗಂಡನ ಮನೆ ಬೀದರ್. ಅಲ್ಲಿಂದ ಬೇಕಾದರೆ ಸ್ಪರ್ಧಿಸಬಹುದಿತ್ತು. ಬಾಗಲಕೋಟೆಗೆ ಬಂದು ಸ್ಪರ್ಧೆ ಮಾಡುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.
5
+ ನಿನ್ನೆ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ವೀಣಾ ಕಾಶಪ್ಪನವರ್ ಅವರಿಗೆ ವಿಧಾನಪರಿಷತ್ ಸದಸ್ಯತ್ವ ಅಥವಾ ವಿಧಾನಸಭೆಯ ಯಾವುದಾದರೂ ಕ್ಷೇತ್ರವನ್ನು ನಿಗದಿ ಮಾಡುವಂತೆ ಜಿಲ್ಲೆಯ ಹಿರಿಯ ನಾಯಕರೊಬ್ಬರು ಕೈಮುಗಿದು ಕೇಳಿಕೊಂಡರು.
6
+ ಆದರೆ ಅದಕ್ಕೆ ಒಪ್ಪದ ನಾಯಕರು ಮೊದಲು ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲಿ. ಅಲ್ಲಿವರೆಗೂ ಯಾವುದೇ ಸ್ಥಾನಮಾನವಿಲ್ಲ ಎಂದಿದ್ದಾರೆ. ಅಲ್ಲಿಗೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಸಮರ್ಥಳು. ಯಾವ ಸ್ಥಾನಮಾನಕ್ಕೂ ಅರ್ಹಳಲ್ಲ ಎಂಬ ಭಾವನೆ ಮೂಡಿದಂತಾಗಿದೆ. ಈ ಬೆಳವಣಿಗೆಯಿಂದ ಮನಸ್ಸಿಗೆ ನೋವಾಗಿದ್ದು, ಆರೋಗ್ಯ ಹದಗೆಟ್ಟಿದೆ.
7
+ ಎರಡು ದಿನಗಳ ಕಾಲ ವಿಶ್ರಾಂತಿ ಪಡೆದು ನಂತರ ಬಾಗಲಕೋಟೆಗೆ ಹೋಗಿ ಸ್ಥಳೀಯ ನಾಯಕರು ಹಾಗೂ ಬೆಂಬಲಿಗರ ಜೊತೆ ಚರ್ಚೆ ಮಾಡುತ್ತೇನೆಂದು ಹೇಳಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಮಹಿಳಾ ಘಟಕದ ಉಪಾಧ್ಯಕ್ಷೆಯಾಗಿದ್ದೇನೆ. ಆ ಸ್ಥಾನಗಳಿಗೆ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್ ಪಕ್ಷದಲ್ಲೇ ಉಳಿಯಲಿದ್ದು, ಕುಟುಂಬದ ಫೌಂಡೇಶನ್ನಿಂದ ಸಮಾಜಸೇವೆಯನ್ನು ಮುಂದುವರೆಸುವುದಾಗಿ ಸ್ಪಷ್ಟಪಡಿಸಿದರು.
8
+ ಸಂಯುಕ್ತ ಪಾಟೀಲ್ ಈ ಹಿಂದಿನ ಚುನಾವಣೆಯಲ್ಲಿ ಸ್ರ್ಪಸಲು ಮುಂದೆ ಬಂದಿರಲಿಲ್ಲ. ಈಗ ಕಾಂಗ್ರೆಸ್ ಅಧಿಕಾರದಲ್ಲಿದೆ. ಜಿಲ್ಲೆಯಲ್ಲಿ 5 ಮಂದಿ ಶಾಸಕರಿದ್ದಾರೆ ಎಂಬ ಕಾರಣಕ್ಕೆ ಚುನಾವಣೆಗೆ ನಿಲ್ಲುತ್ತಿದ��ದಾರೆ. ನಾನು ಚುನಾವಣೆಯಲ್ಲಿ ತಟಸ್ಥಳಾಗಿರುತ್ತೇನೆ ಎಂದು ಹೇಳಿದರು.
eesanje/url_46_192_5.txt ADDED
@@ -0,0 +1,7 @@
 
 
 
 
 
 
 
 
1
+ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬೆಂಗಳೂರಲ್ಲೇ ತಯಾರಾಗಿತ್ತು ಬಾಂಬ್
2
+ ಬೆಂಗಳೂರು, ಮಾ.29-ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬೆಂಗಳೂರು ಸಮೀಪವೇ ಬಾಂಬ್ ತಯಾರಿಸಲಾಗಿತ್ತು ಎಂಬುದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಮುಜಾಮಿಲ್ ಷರೀಫ್ಎಂಬಾತನನ್ನು ಎನ್ಐಎ ನಿನ್ನೆ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಈ ಮಾಹಿತಿ ಲಭ್ಯವಾಗಿದೆ.
3
+ ಆರೋಪಿ ಮುಜಾಮಿಲ್ ಷರೀಫ್ ಈ ಸ್ಪೋಟಕ್ಕೆ ಸಂಚು ರೂಪಿಸಿ ಅದಕ್ಕೆ ಬೇಕಾದ ಸಾಮಗ್ರಿಗಳ ಸಾಗಾಟಕ್ಕೆ ನೆರವು ನೀಡಿರುವುದು ಸಹ ತನಿಖೆಯಿಂದ ಗೊತ್ತಾಗಿದೆ. ತಲೆ ಮರೆಸಿಕೊಂಡಿರುವ ಅಬ್ದುಲ್ ಮತಿನ್ ತಾಹ ಹಾಗೂ ಮುಸಾವೀರ್ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳೆಂದು ಗೊತ್ತಾಗಿದೆ.
4
+ ಮಾ.1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ, ಪರಾರಿಯಾಗಿರುವ ಮುಸಾವೀರ್ ಪ್ರಕರಣದ ಪ್ರಮುಖ ಆರೋಪಿ. ಇದರ ಸೂತ್ರದಾರ ಅಬ್ದುಲ್ ಮತಿನ್ ತಾಹ ಎಂದು ಎನ್ಐಎ ತನಿಖೆಯಿಂದ ತಿಳಿದು ಬಂದಿದೆ. ತಲೆ ಮರೆಸಿಕೊಂಡಿರುವ ಇವರಿಬ್ಬರ ಬಂಧನಕ್ಕೆ ಎನ್ಐಎ ದೇಶದಾದ್ಯಂತ ಶೋಧ ಮುಂದುವರೆದಿದೆ.
5
+ ಆರೋಪಿ ಮುಜಾಮಿಲ್ ಷರೀಫ್ ಕಳೆದ ಒಂದೂವರೆ ವರ್ಷದ ಹಿಂದೆ ಬಸವೇಶ್ವರ ನಗರದ ಹಾವನೂರು ಸರ್ಕಲ್ ಬಳಿ ಚಿಕನ್ ಕೌಂಟಿ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ಎಂಬ ವಿಷಯ ಎನ್ಐಎ ತನಿಖೆಯಿಂದ ಗೊತ್ತಾಗಿದೆ.
6
+ ಹೊರ ರಾಜ್ಯಗಳಿಗೆ ಪರಾರಿಯಾಗಿರುವ ಪ್ರಮುಖ ಇಬ್ಬರು ಆರೋಪಿಗಳಿಗೆ ಈ ಆರೋಪಿ ಸಹಕಾರ ನೀಡಿರುವುದು ಎನ್ಐಎ ತನಿಖೆಯಿಂದ ತಿಳಿದು ಬಂದಿದೆ. ಆರೋಪಿ ಮುಸಾವೀರ್ನ ಜವಾಬ್ದಾರಿಯನ್ನು ಮುಜಾಮಿಲ್ ಷರೀಫ್ ಹೊತ್ತುಕೊಂಡಿದ್ದನು ಎಂಬ ಅಂಶ ತನಿಖೆಯಿಂದ ಬೆಳಕಿಗೆ ಬಂದಿದ್ದು, ಸ್ಫೋಟದ ನಂತರ ಮುಸಾವೀರ್ ತಲೆಮರೆಸಿಕೊಳ್ಳಲು ಈ ಆರೋಪಿ ಸಾರಿಗೆ ವ್ಯವಸ್ಥೆ ಮಾಡಿರುವ ಸಂಗತಿ ಗೊತ್ತಾಗಿದೆ.
7
+ ಆರೋಪಿ ಅಬ್ದುಲ್ ಮತಿನ ತಾಹನ ಸೂಚನೆಯಂತೆ ಮುಜಾಮಿಲ್ ಷರೀಫ್ ಸ್ಫೋಟಕ್ಕೆ ಬೇಕಾದ ವಸ್ತುಗಳನ್ನು ಸಾಗಾಟ ಮಾಡಿರುವ ಮಾಹಿತಿ ಸಹ ಎನ್ಐಎ ಕಲೆಹಾಕಿದೆ.ಇತ್ತೀಚಿಗೆ ಎನ್ಐಎ ಕರ್ನಾಟಕದ 12 ಸ್ಥಳಗಳಲ್ಲಿ, ತಮಿಳುನಾಡಿನ 5 ಸ್ಥಳ ಹಾಗೂ ಉತ್ತರ ಪ್ರದೇಶದ ಒಂದು ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ದಾಳಿ ನಡೆಸಿ ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಿ, ಹಲವು ಮಾಹಿತಿಗಳನ್ನು ಕಲೆ ಹಾಕಿ ಪ್ರಮುಖ ಆರೋಪಿಗಳಿಗಾಗಿ ಶೋಧ ತೀವ್ರಗೊಳಿಸಿದೆ.
eesanje/url_46_192_6.txt ADDED
@@ -0,0 +1,7 @@
 
 
 
 
 
 
 
 
1
+ 7 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಇಂಡಿಯನ್ ಮೂವ್ಮೆಂಟ್ ಪಾರ್ಟಿ
2
+ ಬೆಂಗಳೂರು,ಮಾ.29-ಇಂಡಿಯನ್ ಮೂವ್ಮೆಂಟ್ ಪಾರ್ಟಿ ಇಂದು 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇಂಡಿಯನ್ ಮೂವ್ ಮೆಂಟ್ ಪಾರ್ಟಿ ರಾಜ್ಯಾಧ್ಯಕ್ಷರಾದ ಮಹದೇವ್ ಉರಗಾಂವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ರಿಸ್ಟೋಫರ್ ರಾಜ್ ಕುಮಾರ್, ಜೆಡಿಯು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ, ಮಹಿಳಾ ಘಟಕದ ಅಧ್ಯಕ್ಷೆ ರಷೀಧಾ ಬೇಗಂ ಮತ್ತಿತರರು ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು.
3
+ ಈ ಸಂದರ್ಭದಲ್ಲಿ ಮಾತನಾಡಿದ ಮಹದೇವ್ ಉರಗಾಂವಿ ಅವರು, ಪರಿಹಾರ ಕಂಡುಕೊಳ್ಳುಲು ಇಂಡಿಯನ್ ಮೂವ್ ಮೆಂಟ್ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷರಾದ ಅಬ್ದುಲ್ ಸುಭಾನ್ ರವರ ನೇತೃತ್ವದಲ್ಲಿ ಪಾರ್ಟಿ ಸದೃಢವಾಗಿದೆ ಎಂದರು.
4
+ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ದಾಂತದಂತೆ ಎಲ್ಲ ವರ್ಗ, ಧರ್ಮ ಜಾತಿಯವರನ್ನ ಸರಿಸಮಾನ ಕಂಡು ಅಭಿವೃದ್ದಿಯತ್ತ ಸಾಗುವುದು ಇಂಡಿಯನ್ ಮೂವ್ ಮೆಂಟ್ ಪಾರ್ಟಿಯ ಉದ್ದೇಶ ಎಂದು ಅವರು ಮಾಹಿತಿ ನೀಡಿದರು.
5
+ ಜನಸಾಮಾನ್ಯರ ಬದುಕು ಹಸನಾಗಬೇಕು, ಬಡವರು, ಕೂಲಿ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಆರ್ಥಿಕ ಭದ್ರತೆ ಮತ್ತು ಆಶ್ರಯ ಸಿಗಬೇಕು ಅದಕ್ಕಾಗಿ ನಮ್ಮ ಹೋರಾಟ ಎಂದು ಅವರು ತಿಳಿಸಿದರು.ಇಂದು ಅಡುಗೆ ಆನಿಲ, ಪೆಟ್ರೋಲ್ ಮತ್ತು ದಿನಬಳಕೆ ಆಹಾರ ಪದಾರ್ಥಗಳು ಬೆಲೆ ಏರಿಕೆಯಿಂದ ಜನ ಜೀವನ ಸಂಕಷ್ಟದಲ್ಲಿ ಇದ್ದಾರೆ. ಅದ್ದರಿಂದ ಇಂಡಿಯನ್ ಮೂವ್ ಮೆಂಟ್ ಪಾರ್ಟಿ ಜನ ಸಾಮಾನ್ಯರಿಗೆ ನೋವಿಗೆ ಧ್ವನಿಯಾಗಿ, ಅವರ ಸಂಕಷ್ಟ ನಿವಾರಣೆ ಮಾಡಲು ಅಧಿಕಾರದಲ್ಲಿ ನಮ್ಮ ಪಾರ್ಟಿ 7 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ ಎಂದರು.
6
+ ಈಗ 7ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಮೊದಲನೇಯ ಪಟ್ಟಿ ಬಿಡುಗಡೆ ಮಾಡಲಾಗಿದೆ ಎರಡನೇಯ ಪಟ್ಟಿಯಲ್ಲಿ 8ಕ್ಷೇತ್ರ ಮತ್ತು ದೇಶದ್ಯಾಂತ 150ಗಳಲ್ಲಿ ಅಭ್ಯರ್ಥಿಗಳು ನಮ್ಮ ಪಕ್ಷದಿಂದ ನಿಲ್ಲುತ್ತಿದ್ದಾರೆ ಎಂದು ತಿಳಿಸಿದರು. ಕರ್ನಾಟಕ ರೈತ ಸಂಘ, ಕನ್ನಡ ಪರ ಸಂಘಟನೆಗಳು ಮತ್ತು ಸ್ವಯಂ ಸೇವ ಸಂಘಟನೆಗಳು ನಮ್ಮ ಪಾರ್ಟಿಯ ಲೋಕಸಭಾ ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರಕ್ಕೆ ಕೈಜೋಡಿಸಿದ್ದಾರೆ ಎಂದು ಹೇಳಿದರು.
7
+ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕ್ರಿಸ್ಟೋಫರ್ ರಾಜ್ ಕುಮಾರ್, ಕೋಲಾರದಿಂದ ಹರ್ಷ, ಬೆಂಗಳೂರು ಕೇಂದ್ರದಿಂದ ಉಮಾ ಸಿ, ಚಿತ್ರದುರ್ಗ ಎಸ್ಸಿ.ಮೀಸಲು ಕ್ಷೇತ್ರದಿಂದ ಬಿ.ಟಿ.ರಾಮಸುಬ್ಬಯ್ಯ, ದಕ್ಷಿಣ ಕನ್ನಡದಲ್ಲಿ ಸುಪ್ರೀತ್ ಕುಮಾರ್ ಪೂಜಾರಿ, ಚಾಮರಾಜನಗರ ಮೀಸಲು ಕ್ಷೇತ್ರದಿಂದ ಕುಡಲೂರು ಶ್ರೀಧರ್ ಮೂರ್ತಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕೋದಂಡರೆಡ್ಡಿ ಸ್ಪರ್ದಿಸುತ್ತಿದ್ದಾರೆ ಎಂದು ಅವರು ಹೇಳಿದರು.
eesanje/url_46_192_7.txt ADDED
@@ -0,0 +1,7 @@
 
 
 
 
 
 
 
 
1
+ ಜನಾರ್ದನ ರೆಡ್ಡಿ ಮೇಲೆ ಕಾಂಗ್ರೆಸ್ ನಾಯಕರು ಆರೋಪ ಸತ್ಯಕ್ಕೆ ದೂರವಾದದ್ದು : ಭೀಮಾಶಂಕರ ಪಾಟೀಲ್
2
+ ಬೆಂಗಳೂರು,ಮಾ.29-ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರು,ಮಾಜಿ ಸಚಿವರಾದ ಜಿ ಜನಾರ್ದನ ರೆಡ್ಡಿ ಅವರ ಮೇಲೆ ಕಾಂಗ್ರೆಸ್ ಪಕ್ಷ ನಾಯಕರು ನೀಡಿರುವ ದೂರು ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರು ಭೀಮಾಶಂಕರ ಪಾಟೀಲ್ ಹೇಳಿದ್ದಾರೆ.
3
+ ಬಿಜೆಪಿ ಪಕ್ಷದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ವಿಲೀನಗೊಳಿಸುವ ಮೊದಲು ಕಾನೂನು ಬದ್ಧವಾದ ಎಲ್ಲಾ ಪ್ರಕ್ರಿಯೆಗಳನ್ನು ಮಾಡಲಾಗಿದೆ.ವೀಲಿನಕ್ಕೆ ಮುನ್ನ ಪಕ್ಷದ ರಾಜ್ಯ ಪದಾದಿಕಾರಿಗಳ ಸಭೆ ಕರೆದು ಪಕ್ಷದ ಅಧ್ಯಕ್ಷರಾಗಿದ್ದ ಜಿ ಜನಾರ್ದನ ರೆಡ್ಡಿ ಅವರು ತಗೆದುಕೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿ ಇರುವುದಾಗಿ ಸರ್ವಾನುಮತದ ಬೆಂಬಲ ನೀಡಿಲಾಗಿತ್ತು.
4
+ ನಂತರ ವೀಲಿನ ಪ್ರಕ್ರಿಯೆ ಮತ್ತು ಬಿಜೆಪಿ ಸೇರ್ಪಡೆ ಸಂಪೂರ್ಣ ಕಾನೂನು ಬದ್ಧವಾಗಿಯೇ ನಡೆದಿದೆ ಆದರೆ ಕಾಂಗ್ರೆಸ್ ಪಕ್ಷ ನಾಯಕರಜನಾರ್ದನ ರೆಡ್ಡಿ ಅವರ ಮೇಲಿನ ಭಯಕ್ಕೆ ಸ್ಪೀಕರ್‍ಗೆ ದೂರು ನೀಡಿ ಕುಟಿಲ ತಂತ್ರ ಅನುಸರಿಸುತ್ತಿದೆ ಎಂದು ದೂರಿದ್ದಾರೆ.
5
+ ಜನಾರ್ದನ ರೆಡ್ಡಿ ಅವರು ರಾಜ್ಯ ರಾಜಕಾರಣದ ದೊಡ್ಡ ಶಕ್ತಿ.ಲೋಕಸಭಾ ಚುನಾವಣೆಯಲ್ಲಿ ಅವರನ್ನು ರಾಜಕೀಯವಾಗಿ ಎದುರಿಸಲು ಆಗದೆ ಈ ರೀತಿಯ ಕುತಂತ್ರ ಕಾಂಗ್ರೆಸ್ ಮಾಡುತ್ತಿದೆ.ಇಂಥಹವುಗಳನ್ನು ನಮ್ಮ ನಾಯಕರು ಅವರ ರಾಜಕೀಯ ಜೀವನದಲ್ಲಿ ಅದೇಷ್ಟೋ ನೋಡಿದ್ದಾರೆ ಇವುಗಳಿಗೆ ಬೆದರುವ ಜಾಯಮಾನ ನಮ್ಮ ನಾಯಕರದಲ್ಲ ಎಂದಿದ್ದಾರೆ.
6
+
7
+ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸಿಕೊಂಡು ಬಂದು ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಮುನ್ನುಡಿ ಬರೆಯುವ ಸಂಕಲ್ಪ ನಾವು ನಮ್ಮ ನಾಯಕರು ಮಾಡುತ್ತೇವೆ ಕಾಂಗ್ರೆಸ್ ಪಕ್ಷ ಈ ರೀತಿ ಹುಳುಕು ಹುಡುಕುವ ಕೆಲಸ ಮಾಡುವುದು ಬಿಟ್ಟು ಲೋಕಸಭೆ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳ ಠೇವಣಿ ಉಳಿಸಿಕೊಳ್ಳುವ ಕಡೆಗೆ ಗಮನಹರಿಸಲಿ ಎಂದು ಭೀಮಾಶಂಕರ ಪಾಟೀಲ್‍ಟೀಕಿಸಿದ್ದಾರೆ.
eesanje/url_46_192_8.txt ADDED
@@ -0,0 +1,6 @@
 
 
 
 
 
 
 
1
+ ಪಿಎಸ್‍ಐ ಮರುಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ
2
+ ಬೆಂಗಳೂರು,ಮಾ.29-ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‍ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
3
+ ಒಟ್ಟು 545 ಪಿಎಸ್‍ಐ ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ.
4
+ ಸಿಇಟಿ; ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ :ಏ.18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ ಸಿಇಟಿ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಸಲ್ಲಿಸಲು ಮಾ. 30ರ ಬೆಳಿಗ್ಗೆ 11 ಗಂಟೆಯಿಂದ ಏ.1ರ ಸಂಜೆ 4 ಗಂಟೆಯವರೆಗೆ ಮತ್ತೊಂದು ಅವಕಾಶ ಕೊಡಲಾಗಿದೆ. ಅರ್ಜಿ ಸಲ್ಲಿಸುವವರು ಏ.1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು. ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
5
+ ಕೆಸೆಟ್ ಪರೀಕ್ಷೆ; ಪರಿಷ್ಕøತ ಕೀ ಉತ್ತರಗಳು ಪ್ರಕಟ :ಜ.23ರಂದು 42 ನಾನಾ ವಿಷಯಗಳಿಗೆ ನಡೆಸಲಾಗಿದ್ದ ಕೆಸೆಟ್ ಪರೀಕ್ಷೆಯ ಪೈಕಿ ಆಕ್ಷೇಪಣೆಗಳು ಕಂಡುಬಂದಿದ್ದ 23 ವಿಷಯಗಳಲ್ಲಿ ಮನಃಶಾಸ್ತ್ರವನ್ನು ಹೊರತುಪಡಿಸಿ, ಮಿಕ್ಕ 22 ವಿಷಯಗಳ ಪರಿಷ್ಕøತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ರಮ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6
+ ಪದವಿ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆ ಆಗಿದ್ದು, ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಆಧರಿಸಿ, ಪರಿಷ್ಕøತ ಕೀ ಉತ್ತರಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
eesanje/url_46_192_9.txt ADDED
@@ -0,0 +1,8 @@
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ವಾರ್ನಿಂಗ್ ಕೊಟ್ಟ ಬಿಜೆಪಿ
2
+ ಬೆಂಗಳೂರು,ಮಾ.29-ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕನಿಷ್ಠ ಪದಗಳಲ್ಲಿ ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಕೆಂಡ ಕಾರಿರುವ ಬಿಜೆಪಿ ಇದೇ ರೀತಿ ಮಾತು ಮುಂದುವರೆಸಿದರೆ ದೂರು ದಾಖಲಿಸುವ ಎಚ್ಚರಿಕೆಯನ್ನು ನೀಡಿದೆ. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಇತಿಮಿತಿಯಲ್ಲಿ ಮಾತನಾಡಿದರೆ ಯತೀಂದ್ರಗೆ ಒಳಿತು. ಇಲ್ಲದಿದ್ದರೆ ನಾವು ಕೂಡ ಅವರಿಗೂ ಕೆಳಮಟ್ಟದ ಭಾಷೆ ಬಳಸಲು ಬರುತ್ತದೆ ಎಂದು ಎಚ್ಚರಿಕೆ ಕೊಟ್ಟರು.
3
+ ತಾವು ನೀಡಿರುವ ಹೇಳಿಕೆಗೆ ತಕ್ಷಣವೇ ಯತೀಂದ್ರ ಕ್ಷಮೆಯಾಚಿಸಬೇಕು. ಇದೇ ರೀತಿ ನಾಲಿಗೆ ಹರಿದುಬಿಟ್ಟರೆ ಅವರ ಭಾಷೆಯಲ್ಲೇ ಪ್ರತ್ಯುತ್ತರ ಕೊಡುತ್ತೇವೆ ಎಂದು ಗುಡುಗಿದರು. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಸಿದ್ದರಾಮಯ್ಯನವರ ಮಗ ಎಂಬ ಕಾರಣಕ್ಕೆ ಯತೀಂದ್ರ ರಾಷ್ಟ್ರೀಯ ನಾಯಕರ ಬಗ್ಗೆ ಮಾತಾಡಿದರೆ ದೊಡ್ಡ ವ್ಯಕ್ತಿಯಾಗಬಹುದು ಎಂಬ ಭ್ರಮೆಯಲ್ಲಿದ್ದಾರೆ. ಅವರಿಗೆ ಜ್ಞಾನ ಕಡಿಮೆ ಇದೆ, ಬುದ್ಧಿ ಭ್ರಮಣೆಯಾಗಿದೆ. ಯಾರ ಬಗ್ಗೆ ಮಾತಾಡಬೇಕು ಎಂಬುದೇ ಗೊತ್ತಿಲ್ಲ. ಅಮಿತ್ ಶಾ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಮೈಸೂರು ರಾಜಕೀಯದ ಬಗ್ಗೆ ಮಾತನಾಡುವುದಕ್ಕೂ ಯೋಗ್ಯತೆ ಇಲ್ಲದ ಯತೀಂದ್ರಗೆ ಅಮಿತ್ ಶಾ ಬಗ್ಗೆ ಮಾತನಾಡುವುದು ಸೋಜಿಗ. ಯತೀಂದ್ರ ವಿರುದ್ಧ ದೂರು ದಾಖಲು ಮಾಡುತ್ತೇವೆ ಎಂದರು.
4
+ ಕೇಂದ್ರದ ಮಾಜಿ ಸಚಿವ ಸದಾನಂದಗೌಡ ಮಾತನಾಡಿ, ಬೇರೆಯವರ ಬಗ್ಗೆ ಹಗುರವಾಗಿ ಮಾತಾಡುವುದು ಮತ್ತು ಬಯ್ಯುವುದನ್ನೇ ಕೆಲವರು ರಾಜಕೀಯದಲ್ಲಿ ದೊಡ್ಡತನ ಅಂದುಕೊಳ್ಳುತ್ತಾರೆ. ಅಂಥವರ ಪಾಲಿಗೆ ಯತೀಂದ್ರ ಸಿದ್ದರಾಯ್ಯ ಸೇರಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ ಎಂದರು.
5
+ ತಮ್ಮ ತಂದೆ ಸಿದ್ದರಾಮಯ್ಯ 14 ಬಜೆಟ್ ಮಂಡಿಸಿರುವ ಬಗ್ಗೆ ಯತೀಂದ್ರ ಹೇಳಿಕೊಳ್ಳುತ್ತಿರುತ್ತಾರೆ, ಅವರ ಸಾಧನೆ ಬಗ್ಗೆ ಮಾತಾಡಲಿ ಯಾರು ಬೇಡ ಎನ್ನುತ್ತಾರೆ. ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವರು ಯಾಕೆ ಮಾತಾಡುವುದು? ಎಂದು ಪ್ರಶ್ನಿಸಿದರು.
6
+ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಕಾರಕ್ಕೆ ಬರಲಿದೆ ಮತ್ತು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸದಾನಂದ ಗೌಡ ಹೇಳಿದರು. ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾತನಾಡಿ, ಯತೀಂದ್ರ ಕೀಳುಮಟ್ಟದ ಹೇಳಿಕೆ ಕೊಟ್ಡಿದ್ದಾರೆ. ಮಾತಿನ ಮೇಲೆ ನಿಗಾ ಇರಬೇಕು, ಐರನ್ ಮ್ಯಾನ್ ಅಮಿತ್ ಶಾ ಅವರು ದೇಶ ಉಳಿಸುವುದಕ್ಕೆ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ಗುಂಡಾ ಅಂತಾರೆ. ತಕ್ಷಣ ಕ್ಷಮೆ ಕೇಳಬೇಕು. ತಮ್ಮಹೇಳಿಕೆ ವಾಪಸ್ ಪಡೆಯಬೇಕು. ಅಮಿತ್ ಶಾ ಅವರು ನೀಡಿರುವ ಕೊಡುಗೆಯನ್ನು ಯತೀಂದ್ರ ಪರಿವಾರ ಎಳ್ಳಷ್ಟು ಕೊಟ್ಟಿಲ್ಲ. ಸಚಿವರ ಬಗ್ಗೆ ಮಾತನಾಡುವ ಯೋಗ್ಯತೆಯೂ ಇಲ್ಲ ಎಂದು ತಿರುಗೇಟು ನೀಡಿದರು.
7
+ ಮಾಜಿ ಸಚಿವ ಸಿ.ಟಿ ರವಿ ಮಾತನಾಡಿ, ಅಪ್ಪನ ಹೆಸರಲ್ಲಿ ಅಕಾರಕ್ಕೆ ಬಂದವರು ಹೀಗೆ.. ಯತೀಂದ್ರ ಎಂದಾದರೂ ಪಕ್ಷದ ಕೆಲಸ ಮಾಡಿದ್ದಾರಾ? ಅಮಿತ್ ಶಾ 1982ರಲ್ಲಿ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಇನ್ನೂ ಎಂಎಲ್‍ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನಿಂದ ಶಾಸಕರಾದವರು ಯತೀಂದ್ರ. ಆದರೆ ನಾವು ವಿದ್ಯಾರ್ಥಿಗಳಾಗಿದ್ದಾಗಲೇ ನಾಯಕರಾಗಿದ್ದೆವು.
8
+ ನಮ್ಮ ಮೇಲೂ ಸುಳ್ಳು ಕೇಸ್ ಹಾಕಿ ಗೂಂಡಾ ಕಾಯ್ದೆ ಹಾಕಿದ್ದರು. ಹಾಗಾದ ಮಾತ್ರಕ್ಕೆ ನಾನೂ ಗುಂಡಾನಾ? ಅಪ್ಪನ ಹೆಸರಲ್ಲಿ ಅಕಾರಕ್ಕೆ ಬಂದವರಿಗೆ ಸಾಮಾನ್ಯ ಕಾರ್ಯಕರ್ತರ ಕಷ್ಟ ಹೇಗೆ ತಿಳಿಯುತ್ತದೆ? ಎಂದು ಕಿಡಿಕಾರಿದರು.ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ಓರ್ವ ಗೂಂಡಾ, ರೌಡಿ. ಗುಜರಾತ್‍ನಲ್ಲಿ ನರಮೇಧ ಮಾಡಿದವರು ಯಾರು? ಇಂಥವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂಥವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದರು.
eesanje/url_46_193_1.txt ADDED
@@ -0,0 +1,6 @@
 
 
 
 
 
 
 
1
+ ಇಂದು ಬರಹಗಾರ, ಕರ್ನಾಟಕ ಏಕೀಕರಣ ಹೋರಾಟಗಾರ ಹುಲ್ಲೂರು ಶ್ರೀನಿವಾಸ ಜೋಯಿಸರ ಜನ್ಮದಿನ
2
+ ನಮ್ಮ ನಾಡಿನ ಮಹಾನ್ ಸಂಶೋಧಕ, ರಾಷ್ಟ್ರಪ್ರೇಮಿ, ಕರ್ನಾಟಕ ಏಕೀಕರಣಕ್ಕೆ ದುಡಿದ, ಪುರೋಹಿತ ಮನೆತನಕ್ಕೆ ಸೇರಿದ ಹುಲ್ಲೂರು ಶ್ರೀನಿವಾಸ ಜೋಯಿಸರು ಮಾರ್ಚ್ 29, 1892ರಲ್ಲಿ ಜನಿಸಿದರು. ಅವರ ಕುಟುಂಬದ ಹಿರಿಯರು ಸುಮಾರು ಮೂರು ನೂರು ವರ್ಷಗಳ ಹಿಂದೆ ಬಳ್ಳಾರಿ ಜಿಲ್ಲೆಯ ಕೊಟ್ಟೂರು ಬಳಿಯ ಅಂಬಳೆ ಗ್ರಾಮದಿಂದ ಚಿತ್ರದುರ್ಗ ಜಿಲ್ಲೆಯ ಹುಲ್ಲೂರಿಗೆ ವಲಸೆ ಬಂದವರು.
3
+ ತಂದೆ ಪಾಂಡುರಂಗ ಜೋಯಿಸ್, ತಾಯಿ ಪಾರ್ವತಮ್ಮನವರು. ಶ್ರೀನಿವಾಸ ಜೋಯಿಸರು ಪ್ರಾಥಮಿಕ ಶಿಕ್ಷಣ ಪಡೆದದು ಚಿತ್ರದುರ್ಗದಲ್ಲಿ. ಮೆಟ್ರಿಕ್ ಉತ್ತೀರ್ಣರಾದ ಬಳಿಕ ಕೆಲಕಾಲ ನೌಕರಿಯಲ್ಲಿದ್ದರು. ನಂತರದಲ್ಲಿ ಕಾನೂನು ಪದವಿ ಪಡೆದು ವಕೀಲಿ ವೃತ್ತಿ ಆರಂಭಿಸಿದರು.ಶ್ರೀನಿವಾಸ ಜೋಯಿಸರು ವೃತ್ತಿಯಲ್ಲಿ ವಕೀಲರಾಗಿದ್ದರೂ ಅಧ್ಯಯನ ಶೀಲರಾಗಿದ್ದು, ಇತಿಹಾಸ ಸಂಶೋಧನೆಯಲ್ಲಿ ಪ್ರಾವೀಣ್ಯತೆ ಪಡೆದಿದ್ದರು. ಅವರು ಕರ್ನಾಟಕ ಏಕೀಕರಣ, ಸ್ವಾತಂತ್ರ್ಯ ಹೋರಾಟಗಳಲ್ಲೂ ಸಕ್ರಿಯರಾಗಿ ಪಾಲ್ಗೊಂಡಿದ್ದರು.
4
+ ಚಿತ್ರದುರ್ಗದ ಇತಿಹಾಸದ ಜೊತೆಗೆ ಕರ್ನಾಟಕದ ಇತಿಹಾಸದ ಬಗ್ಗೆ ನೂರಾರು ಲೇಖನಗಳನ್ನು ಬರೆದಿದ್ದಾರೆ. ಐತಿಹಾಸಿಕ ಸ್ಥಳಗಳು, ವ್ಯಕ್ತಿಗಳು, ಘಟನೆಗೆ ಸಂಬಂಸಿದಂತೆ, ಭಾಷೆ, ಧರ್ಮ, ಸಂಸ್ಕೃತಿ, ಶೌರ್ಯ, ಸಾತ್ವಿಕತೆ, ಆದರ್ಶ, ಉದಾರತೆ ಮೊದಲಾದ ಗುಣಗಳನ್ನು ಚಿತ್ರಿಸುವ ಉದ್ದೇಶದಿಂದ ಅವರು ಇಪ್ಪತ್ತೈದು ವರ್ಷಗಳ ಕಾಲ ಸುಮಾರು ಮುನ್ನೂರಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ.
5
+ ಹುಲ್ಲೂರು ಶ್ರೀನಿವಾಸ ಜೋಯಿಸರು ರಚಿಸಿರುವ ಹತ್ತು ಪುಸ್ತಕಗಳಲ್ಲಿ ಗಂಡುಗಲಿ ಕುಮಾರರಾಮ, ಕನ್ನಡ ಕಲಿ ಸಿರುಮನ ಚರಿತೆ ಬಹುಮುಖ್ಯವಾದುವು. ಇವರು ಸಂಪಾದಿಸಿ ಪ್ರಕಟಿಸಿದ ಚಿತ್ರದುರ್ಗದ ಬಖೈರು ಐತಿಹಾಸಿಕ ದಾಖಲೆಯ ಕೃತಿಯಾಗಿದೆ.ಹುಲ್ಲೂರು ಶ್ರೀನಿವಾಸ ಜೋಯಿಸರು ಪತ್ರಿಕಾ ವರದಿಗಾರರಾಗಿ, ಚಿತ್ರದುರ್ಗ ಜಿಲ್ಲೆಯ ಪತ್ರಿಕೋದ್ಯಮಿಗಳ ಸಂಘದ ಅಧ್ಯಕ್ಷರಾಗಿ, ಮೈಸೂರು ಸಂಸ್ಥಾನ ಪತ್ರಿಕೋದ್ಯೋಗಿಗಳ ಸಂಘದ, ಮೈಸೂರು ಪ್ರಾದೇಶಿಕ, ಐತಿಹಾಸಿಕ ಪತ್ರಗಳ ಶೋಧನಾ ಸಮಿತಿ, ಯೋಜನಾ ಸಮಿತಿಗಳ ಸದಸ್ಯರಾಗೂ ಸಹ ಮಹತ್ವದ ಸೇವೆ ಸಲ್ಲಿಸಿದ್ದಾರೆ.
6
+ 2000 ವರ್ಷದಷ್ಟು ದೀರ್ಘ ಇತಿಹಾಸ ದಾಖಲಿಸಿರುವ ಹುಲ್ಲೂರು ಶ್ರೀನಿವಾಸ ಜೋಯಿಸರು, ತಾವೇ ಸ್ಥಾಪಿಸಿದ ಚಿತ್ರದುರ್ಗದ ಪ್ರಾಚ್ಯವಸ್ತು ಸಂಗ್ರಹಾಲಯದ ಗೌರವ ಕ್ಯೂರೇಟರಾಗಿಯೂ ಸೇವೆ ಸಲ್ಲಿಸಿದ್ದರು. ಈ ಮಹಾನ್ ಸಾಧಕರು 1956ರ ನವೆಂಬರ್ 08 ರಂದು ನಿಧನರಾದರು. ಶ್ರೀನಿವಾಸ ಜೋಯಿಸರಿಗೆ ಇತಿಹಾಸ ಸಂಶೋಧನಾ ಪ್ರಸಕ್ತ ಐತಿಹ್ಯ ವಿಮರ್ಶನ ವಿಚಕ್ಷಣ ಮುಂತಾದ ಬಿರುದು ಗೌರವ ಸಂದಿವೆ. ತ.ರಾ.ಸು. ಮತ್ತು ಜಿ.ವರದರಾಜರಾಯರು ಕ್ರಮವಾಗಿ ಹಂಸಗೀತೆ ಮತ್ತು ಕುಮಾರರಾಮನ ಸಾಂಗತ್ಯ ಕೃತಿಗಳನ್ನು ಶ್ರೀನಿವಾಸ ಜೋಯಿಸರಿಗೆ ಗೌರವ ಸಲ್ಲಿಸಿದ್ದಾರೆ.
eesanje/url_46_193_10.txt ADDED
@@ -0,0 +1,7 @@
 
 
 
 
 
 
 
 
1
+ ವಿಶೇಷಚೇತನರ ಮತದಾನಕ್ಕೆ ವಿಶೇಷ ವ್ಯವಸ್ಥೆ
2
+ ಬೆಂಗಳೂರು,ಮಾ.27-ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಯಾವುದೇ ಸಮಸ್ಯೆ ಇಲ್ಲದಂತೆ ಮತದಾನ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ಮನವಿ ಮಾಡಿಕೊಂಡರು.
3
+ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರವಾಹನಗಳಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ ಚೇತನರ ಮೂಲಕ ಜಾಗೃತಿ ಜಾಥ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
4
+ ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಗುರಿಯಾಗಿದೆ. ಅದರಂತೆ, ವಿಶೇಷ ಚೇತನರು, 85 ವರ್ಷ ಮೇಲ್ಪಟ್ಟವರು ಹಾಗೂ ತೃತೀಯ ಲಿಂಗಿಗಳು ಎಲ್ಲರನ್ನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ತಪ್ಪದೆ ಮತದಾನ ಮಾಡಲು ಮನವಿ ಮಾಡಲಾಗುತ್ತಿದೆ ಎಂದರು.
5
+ ವಿಶೇಷ ಚೇತನರು ಮತದಾನ ಮಾಡುವ ವೇಳೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಮತಗಟ್ಟೆಗಳ ಬಳಿ ರ್ಯಾಂಪ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಎಲ್ಲಾ ವಿಶೇಷ ಚೇತನರು ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ತಪ್ಪದೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಲು ಮನವಿ ಮಾಡಿದರು.
6
+ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ರವರು ಜಾಥಾಗೆ ಚಾಲನೆ ನೀಡಿದರು. ವಿಶೇಷ ಚೇತನರ ದ್ವೀಚಕ್ರ, ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮವು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಿಂದ ಪ್ರಾರಂಭವಾಗಿ ಕೆ.ಆರ್ ವೃತ್ತ, ನೃಪತುಂಗ ರಸ್ತೆ, ಹಡ್ಸನ್ ವೃತ್ತದ ಮೂಲಕ ಕಂಠೀರವ ಕ್ರೀಡಾಂಗಣದವರೆಗೆ ಸಾಗಿ ಮುಕ್ತಾಯಗೊಳಿಸಲಾಯಿತು.
7
+ ಪ್ರತಿಜ್ಞಾ ವಿಧಿ ಸ್ವೀಕಾರ:ಲೋಕಸಭಾ ಚುನಾವಣೆಯ ಹಿನ್ನೆಲೆ ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮದ ವೇಳೆ ನೆರೆದಿದ್ದ ವಿಶೇಷ ಚೇತನರು ಹಾಗೂ ಅಧಿಕಾರಿಗಳು ಪ್ರತಿಜ್ಞಾನ ವಿಧಿ ಸ್ವೀಕರಿಸಿದರು.ಈ ವೇಳೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್, ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಕಾಂತರಾಜ್ , ಬೆಂಗಳೂರು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ ಸೇರಿದಂತೆ ಇನ್ನಿತರೆ ಅ„ಕಾರಿಗಳು ಉಪಸ್ಥಿತರಿದ್ದರು.
eesanje/url_46_193_11.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಬೇಸಿಗೆಯಲ್ಲಿ ವಿದ್ಯುತ್ ಕೊರತೆಯಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ : ಜಾರ್ಜ್
2
+ ಬೆಂಗಳೂರು, ಮಾ.27-ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಅಗತ್ಯ ಇರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಸಚಿವರು, ಸದ್ಯ ಪರಿಸ್ಥಿತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
3
+ ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಯಾವುದೇ ವರ್ಗದ ಗ್ರಾಹಕರಿಗೆ ಲೋಡ್ ಶೆಡ್ಡಿಂಗ್ ಬಿಸಿ ತಟ್ಟದಂತೆ ಇಲಾಖೆ ಎಚ್ಚರವಹಿಸಿದೆ ಎಂದು ತಿಳಿಸಿದರು.
4
+ ರಾಜ್ಯದಲ್ಲಿ ಪ್ರತಿ ದಿನದ ವಿದ್ಯುತ್ ಬಳಕೆ 329 ಮಿಲಿಯನ್ ಯೂನಿಟ್ನಷ್ಟಿದ್ದು, ಹಿಂದಿನ ವರ್ಷ ಇದೇ ಅವಯ ವಿದ್ಯುತ್ ಬಳಕೆ ಪ್ರಮಾಣ 300 ಮಿ.ಯೂ. ನಷ್ಟಿತ್ತು. ಕಳೆದ ವರ್ಷದ ಗರಿಷ್ಠ ಲೋಡ್ 15300 ಮೆಗಾ ವ್ಯಾಟ್‍ಗಿಂತ ಹೆಚ್ಚಿದ್ದರೆ, ಈ ವರ್ಷದ ಗರಿಷ್ಠ ಲೋಡ್ 17000 ಮೆಗಾ ವ್ಯಾಟ್‍ಗೆ ಏರಿದೆ ಎಂದು ವಿವರಿಸಿದ್ದಾರೆ.
5
+ ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ಕೃಷಿ ಪಂಪ್‍ಸೆಟ್‍ಳಿಗೆ 7 ತಾಸು ವಿದ್ಯುತ್ ಪೂರೈಕೆಗೆ ಆದೇಶ ನೀಡಲಾಗಿದೆ. ಬೇಸಿಗೆ ಕಾರಣದಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುವುದು ಭರವಸೆ ನೀಡಿದ್ದಾರೆ.
6
+ ವಿದ್ಯುತ್ ಬೇಡಿಕೆ ಪೂರೈಕೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿರುವ ಸಚಿವರು, 2024ನೇ ಸಾಲಿನ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬೇಡಿಕೆಗೆ ಅನುಗುಣವಾಗಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಗರಿಷ್ಠ ಉತ್ಪಾದನೆಗೆ ಒತ್ತು ನೀಡಲಾಗಿದೆ. ಉಷ್ಣ ವಿದ್ಯುತ್ ಸ್ಥಾವರಗಳು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಮುಖ್ಯ ಆಧಾರವಾಗಿದ್ದು, ರಾಜ್ಯದ 3 ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಕಳೆದ ವರ್ಷ ಗರಿಷ್ಠ 22 ಸಾವಿರ ಮಿ.ಯೂ. ವಿದ್ಯುತ್ ಉತ್ಪಾದನೆಯಾಗಿದೆ. ಕಳೆದ ವರ್ಷ ಗರಿಷ್ಠ 18 ಸಾವಿರ ಮಿಲಿಯನ್ ಯೂನಿಟ್ ಆಗಿತ್ತು. ಪ್ರಸ್ತುತ 3,250 ಮೆಗಾ ವ್ಯಾಟ್ ಅಥವಾ ದಿನಕ್ಕೆ 75 ಮಿಲಿಯನ್ ಯೂನಿಟ್‍ನಂತೆ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ವಿವರಿಸಿದ್ದಾರೆ.
7
+ ಮಳೆ ಅಭಾವದಿಂದ ಪ್ರಸಕ್ತ ವರ್ಷ ಜಲಾಶಯಗಳು ಅರ್ಧದಷ್ಟು ತುಂಬಿರುವ ಕಾರಣ ನೀರನ್ನು ಸಂರಕ್ಷಿಸಿ, ಬಹಳ ಎಚ್ಚರಿಕೆಯಿಂದ ಬಳಸಲಾಗುತ್ತಿದೆ. ಹಾಗಾಗಿ, ಜಲ ವಿದ್ಯುತ್ ಉತ್ಪಾದನೆ ಕೊಂಚ ಮಟ್ಟಿಗೆ ಕುಂಠಿತಗೊಂಡಿದ್ದರೂ, ಮಾರ್ಚ್ ಮತ್ತು ಏಪ್ರಿಲ್‍ನ ಹೆಚ್ಚಿನ ಬೇಡಿಕೆಯ ಅವಧಿಯಲ್ಲಿ ದಿನವೊಂದಕ್ಕೆ 20 ಮಿ.ಯೂ. ಅಥವಾ 1000 ಮೆ.ವ್ಯಾ ವಿದ್ಯು���್ ಲಭ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.
8
+ ಉತ್ತರ ಪ್ರದೇಶ, ಪಂಜಾಬ್ ಜತೆಗೆ 2024ರ ಜೂನ್‍ನಲ್ಲೇ ದ್ವಿಪಕ್ಷೀಯ ವಿನಿಮಯ ಒಪ್ಪಂದ ಮಾಡಿಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ರಾಜ್ಯಗಳಿಂದ ವಿನಿಮಯ ಆಧಾರದ ಮೇಲೆ ಪ್ರತಿದಿನ ಸರಾಸರಿ 900 ಮೆ.ವ್ಯಾ. ವಿದ್ಯುತ್ ಪಡೆಯಲಾಗುತ್ತಿದೆ. ಮುಂದಿನ ವರ್ಷ ಆ ರಾಜ್ಯಗಳಿಗೆ ಸದರಿ ವಿದ್ಯುತ್ ಅನ್ನು ಹಿಂದಿರುಗಿಸಲಾಗುವುದು ಎಂದು ಹೇಳಿದ್ದಾರೆ.
9
+ ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿಗೊಳಿಸಿ, ಖಾಸಗಿ ವಿದ್ಯುತ್ ಉತ್ಪಾದಕರಿಂದ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಪ್ರಸ್ತುತ 500 ಮೆ.ವ್ಯಾ. ವಿದ್ಯುಚ್ಛಕ್ತಿಯನ್ನು ಖಾಸಗಿ ಉತ್ಪಾದಕರಿಂದ ಪಡೆಯಲಾಗುತ್ತಿದೆ. ಸೌರ ಮತ್ತು ಪವನ ವಿದ್ಯುತ್ ಸ್ಥಾವರಗಳು (ಬಹುತೇಕ ಖಾಸಗಿ ವಲಯ) ಸಾಮಾನ್ಯವಾಗಿ ಮಸ್ಟ್ ರನ್ ಆಧಾರದ ಮೇಲೆ ನಡೆಯುತ್ತವೆ. ಹವಾಮಾನ ಬದಲಾವಣೆಗೆ ಅನುಗುಣವಾಗಿ ಈ ಸ್ಥಾವರಗಳಿಂದ ಉತ್ಪಾದನೆ ಆಗುವ ವಿದ್ಯುತ್ ರಾಜ್ಯಕ್ಕೆ ಲಭ್ಯವಾಗುತ್ತಿದೆ.
10
+ ರಾಜ್ಯಕ್ಕೆ ಹೆಚ್ಚುವರಿ ವಿದ್ಯುತ್ತಿನ ಅಗತ್ಯ ಇದೆ ಎಂದು ಮನವರಿಕೆ ಮಾಡಿಕೊಟ್ಟು, ಕೇಂದ್ರ ಗ್ರಿಡ್‍ನಿಂದ ಈ ವರ್ಷ 302 ಮೆಗಾ ವ್ಯಾಟ್ ವಿದ್ಯುತ್ ಪಡೆಯಲಾಗುತ್ತಿದೆ. ಕಳೆದ ವರ್ಷ ಕೇಂದ್ರ ಗ್ರಿಡ್ ಒಪ್ಪಿಸಲಾಗಿದ್ದ 150 ಮೆಗಾವ್ಯಾಟ್ ವಿದ್ಯುಚ್ಛಕ್ತಿಯನ್ನೂ ವಾಪಸ್ ಪಡೆಯಲಾಗಿದೆ. ಈ ಹೆಚ್ಚುವರಿ ವಿದ್ಯುತ್ ಡಿಸೆಂಬರ್ ತಿಂಗಳಿನಿಂದ ರಾಜ್ಯಕ್ಕೆ ಲಭ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.
11
+ ಅನಿರೀಕ್ಷಿತ ಅಥವಾ ಹಠಾತ್ ವಿದ್ಯುತ್ ಬೇಡಿಕೆಯನ್ನು ಪೂರೈಸಲು, ಕೇಂದ್ರ ಸರ್ಕಾರವು ನಿಗದಿಪಡಿಸಿರುವಂತ ವಿದ್ಯುತ್ ವಿನಿಮಯ ಕೇಂದ್ರದಿಂದ ಪಾರದರ್ಶಕವಾಗಿ ವಿದ್ಯುತ್ ಖರೀದಿಸಲಾಗುತ್ತಿದೆ. ರಾಜ್ಯದಾದ್ಯಂತ ಸಮರ್ಪಕ ವಿದ್ಯುತ್ ಸರಬರಾಜಿನ ಮೇಲ್ವಿಚಾರಣೆಗೆ ಪ್ರತಿ ಜಿಲ್ಲೆಗೆ ಮುಖ್ಯ ಇಂಜಿನಿಯರ್ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಲಾಗಿದೆ. ಕಲ್ಲಿದ್ದಲು ಸಚಿವಾಲಯದಿಂದ ಹೆಚ್ಚುವರಿ ಕಲ್ಲಿದ್ದಲನ್ನು ಸಕಾಲದಲ್ಲಿ ಪಡೆಯಲಾಗಿದೆ, ಆಮದು ಮಾಡಿದ ಹೆಚ್ಚಿನ ವಿದೇಶಿ ಕಲ್ಲಿದ್ದಲನ್ನು ದೇಶೀಯ ಕಲ್ಲಿದ್ದಲಿನೊಂದಿಗೆ ಮಿಶ್ರಣ ಮಾಡಲಾಗುತ್ತಿದೆ. ಯಲಹಂಕ ಬಳಿಯ 370 ಮೆ.ವ್ಯಾ.ಸಾಮರ್ಥ್ಯದ ಅನಿಲ ಸ್ಥಾವರ ಶೀಘ್ರದಲ್ಲೇ ಉತ್ಪಾದನೆ ಆರಂಭವಾಗಲಿದೆ ಎಂದು ಸಚಿವರು ಹರ್ಷ ವ್ಯಕ್ತ ಪಡಿಸಿದ್ದಾರೆ.
eesanje/url_46_193_12.txt ADDED
@@ -0,0 +1,5 @@
 
 
 
 
 
 
1
+ ಟಿಕೆಟ್ ಸಿಗದೆ ನಿರಾಸೆ : ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ರಾಜೀನಾಮೆ
2
+ ಬೆಂಗಳೂರು,ಮಾ.27-ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
3
+ ರಾಜೀನಾಮೆ ಪತ್ರವು ಕ್ರಮಬದ್ದವಾಗಿರುವುದರಿಂದ ಅದನ್ನು ಅಂಗೀಕರಿಸಲಾಗಿದೆ ಎಂದು ಸಭಾಪತಿ ಹೊರಟ್ಟಿ ಅವರು ಹೇಳಿದ್ದಾರೆ. ಮೈಸೂರು-ಕೊಡುಗು ಕ್ಷೇತ್ರದ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಟಿಕೆಟ್‍ಗಾಗಿ ಭಾರೀ ಲಾಬಿಯನ್ನೇ ನಡೆಸಿದ್ದರು. ರಾಜ್ಯ ಬಿಜೆಪಿ ನಾಯಕರು ಹಾಗೂ ಕೇಂದ್ರ ವರಿಷ್ಠರನ್ನು ಭೇಟಿ ಮಾಡಿ ತಮಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು.
4
+ ಆದರೆ ಮೈಸೂರು-ಕೊಡುಗು ಕ್ಷೇತ್ರದಿಂದ ಬಿಜೆಪಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೂ ಟಿಕೆಟ್ ಕೊಡದೆ ರಾಜಮನೆತನದ ಯದುವೀರ್ ನರಸಿಂಹದತ್ತ ಒಡೆಯರಿಗೆ ಟಿಕೆಟ್ ಘೋಷಣೆಯಾಗಿತ್ತು. ಇದರಿಂದ ಅಸಮಾಧಾನಗೊಂಡ ತೇಜಸ್ವಿನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
5
+ ಈ ಹಿಂದೆ ಅವರ ಅಧಿಕಾರ ಅವಧಿ ಜೂನ್ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿತ್ತು. ಈ ಹಿಂದೆ ಕನಕಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ರ್ಪಧಿಸಿ ಮಾಜಿ ಪ್ರಧಾನಿ ದೇವೇಗೌಡರನ್ನು ಪರಾಭವಗೊಳಿಸಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರನ್ನು ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಆಯ್ಕೆ ಮಾಡಲಾಗಿತ್ತು.
eesanje/url_46_193_2.txt ADDED
@@ -0,0 +1,4 @@
 
 
 
 
 
1
+ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಚಾಲಕರಾಗಿ ರೇಣುಕಾಚಾರ್ಯ ನೇಮಕ
2
+ ಬೆಂಗಳೂರು,ಮಾ.29-ಟಿಕಟ್ ಸಿಗದೆ ಪಕ್ಷದ ವರಿಷ್ಠರ ವಿರುದ್ಧವೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.
3
+ ಈ ಕ್ಷೇತ್ರದಿಂದ ಗಾಯತ್ರಿ ಸಿದ್ದೇಶ್ವರ್‍ಗೆ ಟಿಕೆಟ್ ನೀಡಿದ್ದಕ್ಕೆ ಬೇಸರಗೊಂಡಿದ್ದ ಅವರು, ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇದೀಗ ಅವರನ್ನು ದಾವಣಗೆರೆ ಜಿಲ್ಲಾ ಸಂಚಾಲರನ್ನಾಗಿ ನೇಮಕ ಮಾಡುವ ಮೂಲಕ ಭಿನ್ನಮತ ಶಮನಕ್ಕೆ ಪಕ್ಷದ ವರಿಷ್ಠರು ಕೈ ಹಾಕಿದ್ದಾರೆ.
4
+ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್‍ವಾಲ್ ಅವರ ಸೂಚನೆ ಮೇರೆಗೆ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ನೇಮಕ ಮಾಡಿ ತಮ್ಮ ಆದೇಶ ಹೊರಡಿಸಿದ್ದಾರೆ.
eesanje/url_46_193_3.txt ADDED
@@ -0,0 +1,6 @@
 
 
 
 
 
 
 
1
+ ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 25 ಅಭ್ಯರ್ಥಿಗಳಿಂದ 29 ನಾಮಪತ್ರ ಸಲ್ಲಿಕೆ
2
+ ಬೆಂಗಳೂರು,ಮಾ.29-ಪ್ರಸಕ್ತ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಸಂಸದರಾದ ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ಅಭ್ಯರ್ಥಿ ಬ್ರಿಜೇಸ್ ಚೌತಲ ಸೇರಿದಂತೆ 25 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
3
+ ಡಿ.ಕೆ.ಸುರೇಶ್‍ರವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರು ಸ್ಪರ್ಧೆಗಿಳಿದಿದ್ದರೆ ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
4
+ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನವೇ 23 ಪುರುಷ ಹಾಗೂ ಇಬ್ಬರು ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.25 ಅಭ್ಯರ್ಥಿಗಳಿಂದ ಒಟ್ಟು 29 ನಾಮಪತ್ರಗಳನ್ನು ಸಲ್ಲಿಸಲಾಗಿದೆ.
5
+ ಬಿಎಸ್‍ಪಿ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಜೆಡಿಯು, ಜನತಾಪಕ್ಷ, ಯಂಗ್‍ಸ್ಟಾರ್, ಎಂಪೋರ್ಮೆಂಟ್ ಪಕ್ಷಗಳಿಂದ ತಲಾ ಒಬ್ಬರು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರೆ, ಕರ್ನಾಟಕ ರಾಷ್ಟ್ರ ಸಮಿತಿಯಿಂದ 7 ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
6
+ ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾದಿಂದ ಒಬ್ಬರು ಹಾಗೂ ಪಕ್ಷೇತರವಾಗಿ ಒಬ್ಬ ಮಹಿಳಾ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಸ್ವತಂತ್ರ್ಯವಾಗಿ 7 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
eesanje/url_46_193_4.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ಯುವ ಮತದಾರರ ಸಂಖ್ಯೆ ಏರಿಕೆ, 11.24 ಲಕ್ಷ ಮಂದಿಯಿಂದ ಮೊದಲ ಬಾರಿಗೆ ಮತದಾನ
2
+ ಬೆಂಗಳೂರು,ಮಾ.28-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಯುವ ಮತದಾರರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಮೊದಲ ಬಾರಿಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿ ಕೊಂಡಿರುವ ಯುವ ಮತದಾರರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಕಾತರದಿಂದ ಮತದಾನದ ದಿನವನ್ನು ಎದುರು ನೋಡುತ್ತಿದ್ದಾರೆ.
3
+ ಇದಕ್ಕೆ ಪೂರಕ ಎಂಬಂತೆ ಚುನಾ ವಣಾ ಆಯೋಗವು ಮತದಾನ ಮಾಡಲು ಯುವ ಮತದಾ ರರನ್ನು ಆಕರ್ಷಿಸಲು ಜಾಥಾ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮತಗಟ್ಟೆಗಳಿಗೆ ಬಂದು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವಂತೆ ಹಲವು ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
4
+ ಅಲ್ಲದೆ 18 ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹತಾ ದಿನಾಂಕವನ್ನು ಜನವರಿ 1, ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1 ಎಂದು ನಿಗದಿಪಡಿಸಲಾಗಿದೆ. ಈ ದಿನಾಂಕಗಳಂದು 18 ವರ್ಷ ತುಂಬಿದವರು ಯುವ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ.
5
+ ಭಾರತ ಚುನಾವಣಾ ಆಯೋಗ ಪ್ರಕಟಿಸಿರುವ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟು 5,47,08,808 ಮತದಾರರು ಇದ್ದು ಈ ಪೈಕಿ 2,71,21,407 ಪುರುಷ, 2,70,81,748 ಮಹಿಳಾ ಮತದಾರರು ಇದ್ದಾರೆ. ಈ ಪೈಕಿ 18-19ನೇ ವಯಸ್ಸಿನ ಯುವ ಹಾಗೂ ಹೊಸ ಮತದಾರರು ಒಟ್ಟು 11,24,622 ಯುವ ಮತದಾರರು ಇದ್ದಾರೆ. ಇವರಲ್ಲಿ 6,05,068 ಪುರುಷ ಹಾಗೂ 5,19,438 ಮಹಿಳಾ ಹಾಗೂ 116 ತೃತೀಯ ಲಿಂಗಿ ಯುವ ಮತದಾರರು ಇದ್ದಾರೆ.
6
+ ಕಳೆದ 2019ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ 18-19 ವರ್ಷದ ಯುವ ಮತದಾರರ ಸಂಖ್ಯೆ 3,88,527ರಷ್ಟು ರಾಜ್ಯದಲ್ಲಿ ಹೆಚ್ಚಳವಾಗಿದೆ. ಇದರಲ್ಲಿ 1,97,046 ಪುರುಷ ಹಾಗೂ 1,9,453 ಮಹಿಳಾ ಹಾಗೂ 28 ಇತರೆ ಮತದಾರರು ಹೆಚ್ಚಾಗಿದ್ದಾರೆ. ಕಳೆದ ಚುನಾವಣೆಯಲ್ಲಿ 10,10,040 ಯುವ ಮತದಾರರು ಇದ್ದರು.
7
+ ಕ್ಷೇತ್ರವಾರು ಯುವ ಮತದಾರರ ವಿವರ:ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಅತಿಹೆಚ್ಚು 53,077 ಹಾವೇರಿ ಕ್ಷೇತ್ರದಲ್ಲಿ 50658, ಚಿಕ್ಕೋಡಿಯಲ್ಲಿ 50,589 ಹೆಚ್ಚು ಯುವ ಮತದಾರರು ಇದ್ದಾರೆ. ಅತಿಕಡಿಮೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 27461, ಹಾಸನದಲ್ಲಿ 28526 ಯುವ ಮತದಾರರು ಇದ್ದಾರೆ.
8
+ ಬೆಳಗಾವಿ-47095, ಬಾಗಲಕೋಟೆ – 47350, ಬಿಜಾಪುರ -39831, ಗುಲ್ಬರ್ಗಾ-36920, ರಾಯಚೂರು-47394, ಬೀದರ್-39145, ಕೊಪ್ಪಳ 46162, ಧಾರವಾಡ -40763, ಉತ್ತರಕನ್ನಡ-37226, ದಾವಣಗೆರೆ-37934, ಶಿವಮೊಗ್ಗ- 34118, ಉಡುಪಿ-ಚಿಕ್ಕಮಗಳೂರು-29909, ದಕ್ಷಿಣ ಕನ್ನಡ-35763, ಚಿತ್ರದುರ್ಗ- 45676, ತುಮಕೂರು-38829, ಮಂಡ್ಯ-37761, ಮೈಸೂರು-41145, ಚಾಮರಾಜನಗರ- 32482, ಬೆಂಗಳೂರು ಗ್ರಾಮಾಂತರ-47356, ಬೆಂಗಳೂರು ಉತ್ತರ-44464, ಬೆಂಗಳೂರು ಕೇಂದ್ರ-30246, ಚಿಕ್ಕಬಳ್ಳಾಪುರ -43138, ಕೋಲಾರ-45603ರಷ್ಟು ಯುವ ಮತದಾರರು ಇದ್ದಾರೆ.
eesanje/url_46_193_5.txt ADDED
@@ -0,0 +1,6 @@
 
 
 
 
 
 
 
1
+ ನಾಮಪತ್ರ ಸಲ್ಲಿಕೆ ಆರಂಭ : ಶಾಂತಿ-ಸುವ್ಯವಸ್ಥೆ ಕಾಪಾಡಲು ಏ.8ರವರೆಗೆ ನಿಷೇಧಾಜ್ಞೆ
2
+ ಬೆಂಗಳೂರು, ಮಾ.28-ಲೋಕಸಭಾ ಚುನಾವಣೆ ಹಿನ್ನೆಲೆ ಯಲ್ಲಿ ಇಂದಿನಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಿದ್ದು, ಈ ದಿಸೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಏ.8ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಇಂದು ಬೆಳಗ್ಗೆ 10 ಗಂಟೆಯಿಂದ ಏ.8ರ ಸಂಜೆ 6 ಗಂಟೆ ವರೆಗೆ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ನಾಮಪತ್ರ ಸ್ವೀಕರಿಸುವ ಎಲ್ಲಾ ಚುನಾವಣಾಧಿಕಾರಿಗಳ ಕಚೇರಿಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಾದ ಬಿ. ದಯಾನಂದ ಆದೇಶ ಹೊರಡಿಸಿದ್ದಾರೆ.
3
+ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರರು ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಚುನಾವಣಾಕಾರಿಗಳ ಕಚೇರಿಗಳಲ್ಲಿ ನಾಮಪತ್ರ ಸಲ್ಲಿಕೆ ಹಾಗೂ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ನಡೆಯಲಿದ್ದು, ಇಂತಹ ಸಂದರ್ಭಗಳಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಚೇರಿಯ ಬಳಿ ಗುಂಪು ಸೇರುವ ಸಾಧ್ಯತೆಗಳು ಇರುತ್ತವೆ.
4
+ ರಸ್ತೆ ತಡೆ, ಮೆರವಣಿಗೆ, ಪ್ರತಿಭಟನೆ ಮೊದಲಾದ ಚಟುವಟಿಕೆಗಳು ನಡೆಯುವ ಸಂಭವವಿರುವುದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಿ ಸರ್ಕಾರಿ ಕಚೇರಿಯ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವ ಸಾಧ್ಯತೆ ಇರುತ್ತದೆ.
5
+ ಕೆಲ ದುಷ್ಕರ್ಮಿಗಳು ಮತ್ತು ಸಮಾಜಘಾತುಕ ವ್ಯಕ್ತಿಗಳು ಈ ಸಮಯವನ್ನು ಉಪಯೋಗಿಸಿಕೊಂಡು ಸಾರ್ವಜನಿಕ ಇಲ್ಲವೇ ಸರ್ಕಾರಿ ಆಸ್ತಿ ಪಾಸ್ತಿಗಳಿಗೆ ಹಾನಿವುಂಟು ಮಾಡುವ, ವಾಹನ ಸಂಚಾರ, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯುಂಟು ಮಾಡುವ ಹಾಗೂ ಕಾನೂನು ಸುವ್ಯವಸ್ಥೆಗ ಭಂಗ ಉಂಟು ಮಾಡುವ ಸಾಧ್ಯತೆಗಳು ಇರುವುದು ತಿಳಿದು ಬಂದಿದೆ.ಈ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆಯುಕ್ತರು ಪ್ರತಿಬಂಧಕಾಜ್ಞೆಯನ್ನು ವಿಧಿಸಿರುತ್ತಾರೆ.
6
+ ನಿಬಂಧನೆಗಳು*ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು.*ಮೆರವಣಿಗೆ, ಸಭೆಗಳನ್ನು ನಡೆಸುವುದು ಮತ್ತು ಧ್ವನಿವರ್ದಕಗಳನ್ನು ಬಳಸುವಂತಿಲ್ಲ.*ಶಸಾಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಇನ್ನಿತರೆ ಮಾರಕಾಸಗಳನ್ನು ಅಥವಾ ದೈಹಿಕ ಹಿಂಸೆಯನ್ನು ಉಂಟುಮಾಡುವ ಯಾವುದೇ ವಸ್ತುಗಳನ್ನು ಒಯ್ಯು ವಂತಿಲ್ಲ.*ಯಾವುದೇ ಸಂರಕ್ಷಾರ್ಹ ಪದಾರ್ಧ ಅಥವಾ ಸೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿ ಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಮತ್ತು ಶೇಖರಿಸುವುದನ್ನು ನಿಷೇಸಲಾಗಿದೆ.*ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃ��ಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಭಿತ್ತಿ ಪತ್ರ ಅಥವಾ ಯಾವುದೇ ವಸ್ತು ಇಲ್ಲವೇ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಸಲಾಗಿದೆ.
eesanje/url_46_193_6.txt ADDED
@@ -0,0 +1,5 @@
 
 
 
 
 
 
1
+ ರಾಮೇಶ್ವರ ಕೆಫೆ ಸ್ಫೋಟ : ಮತ್ತಿಬ್ಬರನ್ನು ವಶಕ್ಕೆ ಪಡೆದು ಎನ್‍ಐಎ ವಿಚಾರಣೆ
2
+ ಬೆಂಗಳೂರು,ಮಾ.28-ರಾಮೇಶ್ವರ ಕೆಫೆ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಮತ್ತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.ನಿನ್ನೆ ಎನ್‍ಐಎ ಅಧಿಕಾರಿಗಳ ತಂಡ ಬೆಂಗಳೂರು ನಗರ, ತೀರ್ಥಹಳ್ಳಿ, ಭಟ್ಕಳ ಮುಂತಾದ ಕಡೆ ಏಕಕಾಲದಲ್ಲಿ ದಾಳಿ ಮಾಡಿ ಕೆಲವರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದೆ.
3
+ ಶಂಕಿತರ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿರುವ ಇಬ್ಬರು ನಿಷೇತ ಉಗ್ರ ಸಂಘಟನೆಯ ಜೊತೆ ನಂಟು ಹೊಂದಿರುವ ಅನುಮಾನ ವ್ಯಕ್ತವಾಗಿದೆ. ಈ ಹಿಂದೆ ನಡೆದ ಕೆಲವು ಸ್ಪೋಟ ಪ್ರಕರಣಗಳು ಹಾಗೂ ಇತ್ತೀಚೆಗೆ ನಡೆದ ರಾಮೇಶ್ವರಂ ಕೆಫೆ ಸೋಟವು ಸಾಮ್ಯತೆ ಇರುವುದರಿಂದ ಈ ಹಿಂದಿನ ಪ್ರಕರಣಗಳಲ್ಲಿ ಶಾಮೀಲಾದ ಹಲವರ ಮೇಲೆ ಎನ್‍ಐಎ ನಿಗಾ ಇರಿಸಿದೆ.
4
+ ಹಿಂದಿನ ಪ್ರಕರಣದಲ್ಲಿ ಜೈಲಿನಲ್ಲಿರುವ ಹಲವರನ್ನು ಎನ್‍ಐಎ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದ್ದು, ತಲೆಮರೆಸಿಕೊಂಡಿರುವವರ ಮೇಲೂ ತನಿಖಾಕಾಧಿರಿಗಳು ಕಣ್ಣಿಟ್ಟಿದ್ದಾರೆ. ಶಂಕಿತರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನೆರವು ನೀಡಿದವರ ಮೇಲೆಯೂ ಎನ್‍ಐಎ ಹದ್ದಿನ ಕಣ್ಣಿಟ್ಟಿದ್ದು, ಉಗ್ರ ಚಟುವಟಿಕೆಗಳಿಗೆ ನೆರವು ನೀಡಿದ ಆರೋಪ ಎದುರಿಸುತ್ತಿರುವವರನ್ನು ಪತ್ತೆಹಚ್ಚಿ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಾಗಿದೆ.
5
+ ಶಂಕಿತ ವ್ಯಕ್ತಿಗಳ ವಿಚಾರಣೆಯಿಂದ ಸ್ಪೋಟ ಪ್ರಕರಣದ ಆರೋಪಿಯ ಸುಳಿವು ಸಿಗುವ ಸಾಧ್ಯತೆ ಹಿನ್ನೆಲೆಯಲ್ಲಿ ತನಿಖೆ ಮುಂದುವರೆಸಲಾಗಿದೆ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ನಿನ್ನೆ ಬೆಂಗಳೂರಿನ 5 ಕಡೆ, ಶಿವಮೊಗ್ಗ ಜಿಲ್ಲೆಯ 15 ಸ್ಥಳಗಳಲ್ಲಿ ಹಾಗೂ ತಮಿಳುನಾಡಿನ ಚೆನ್ನೈನ ಆರು ಸ್ಥಳಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
eesanje/url_46_193_7.txt ADDED
@@ -0,0 +1,8 @@
 
 
 
 
 
 
 
 
 
1
+ ಚುನಾವಣಾ ಕಾಂಚಾಣ : ಈವರೆಗೆ ರಾಜ್ಯದಲ್ಲಿ 55 ಕೋಟಿ ರೂ. ಮೌಲ್ಯದ ನಗದು, ಉಡುಗೊರೆ, ಮದ್ಯ ಜಪ್ತಿ
2
+ ಬೆಂಗಳೂರು,ಮಾ.28-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ನಗದು, ಉಚಿತ ಉಡುಗೊರೆ, ಮದ್ಯ, ಚಿನ್ನ, ಬೆಳ್ಳಿ, ವಜ್ರಾಭರಣಗಳು ಸೇರಿದಂತೆ 55.76 ಕೋಟಿ ರೂ. ಮೌಲ್ಯದ ವಸ್ತುಗಳನ್ನು ರಾಜ್ಯದಲ್ಲಿ ಜಪ್ತಿ ಮಾಡಲಾಗಿದೆ.
3
+ ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಪ್ರಸಕ್ತ ಚುನಾವಣೆಯಲ್ಲಿ ದುಪ್ಪಟ್ಟು ಹಣ ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನೀಡಿರುವ ಪ್ರಕಟಣೆ ಪ್ರಕಾರ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ ಒಟ್ಟು 55.76 ಕೋಟಿ ರೂ. ಮೌಲ್ಯದ ನಗದು ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
4
+ ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ 14 ದಿನಗಳ ಅವಯಲ್ಲಿ 26.54 ಕೋಟಿ ರೂ. ಮೊತ್ತದ ನಗದು, ಚಿನ್ನಾಭರಣ, ಮದ್ಯವನ್ನು ವಶಪಡಿಸಿಕೊಳ್ಳಲಾಗಿತ್ತು. ಪ್ರಸಕ್ತ ಚುನಾವಣೆಯಲ್ಲಿ ಕೇವಲ 10 ದಿನಗಳ ಅವಧಿಯಲ್ಲೇ ಅದರ ಎರಡು ಪಟ್ಟು ವಶಪಡಿಸಿಕೊಳ್ಳಲಾಗಿದೆ. 19.69 ಕೋಟಿ ರೂ. ನಗದು, 3.7 ಕೋಟಿ ರೂ. ಉಚಿತ ಉಡುಗೊರೆ, 26.20 ಕೋಟಿ ರೂ. ಮದ್ಯ, 88 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯ, 5.47 ಕೋಟಿ ರೂ. ಮೌಲ್ಯದ ಚಿನ್ನ, 26 ಲಕ್ಷ ರೂ. ಮೌಲ್ಯದ ಬೆಳ್ಳಿ, 9 ಲಕ್ಷ ರೂ. ಮೌಲ್ಯದ ವಜ್ರಾಭರಣಗಳನ್ನು ಚುನಾವಣೆ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದೆ.
5
+ ಇದುವರೆಗೆ 26.20 ಕೋಟಿ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್, ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿರುವುದೂ ಸೇರಿದೆ.4.76 ಕೆ.ಜಿ. ತೂಕದ 4,75,65,652 ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಅಧಿಕಾರಿಗಳು 71,16,480 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
6
+ ಒಟ್ಟು 9.74 ಕೆ.ಜಿ ತೂಕದ 5,46,82,132 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ನಗದು, ಮದ್ಯ, ಡ್ರಗ್ಸ್, ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳಿಗೆ ಸಂಬಂಧಿಸಿದಂತೆ 847 ಎಫ್‍ಐಆರ್‍ಗಳನ್ನು ದಾಖಲಿಸಲಾಗಿದೆ. 92,664 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಿದ್ದು, 875 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 15 ಶಸ್ತ್ರಾಸ್ತ್ರಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಅಬಕಾರಿ ಇಲಾಖೆ ಘೋರ ಅಪರಾಧದಡಿಯಲ್ಲಿ 848 ಪ್ರಕರಣಗಳನ್ನು ದಾಖಲಿಸಲಾಗಿದೆ.
7
+ ಪರವಾನಗಿ ಉಲ್ಲಂಘನೆಯಡಿಯಲ್ಲಿ 706 ಪ್ರಕರಣ ದಾಖಲಿಸಿದ್ದು, ಎನ್‍ಡಿಪಿಎಸ್ ಅಡಿಯಲ್ಲಿ 44 ಪ್ರಕರಣಗಳನ್ನು, ಅಬಕಾರಿ ಕಾಯ್ದೆಯಡಿ 3,013 ಪ್ರಕರಣಗಳನ್ನು ದಾಖಲಿಸಲಾಗಿದೆ. 492 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
8
+ ಕ್ಷಿಪ್ರ ಪಡೆಯವರು ಶ್ರವಣಬೆಳಗೊಳದ ಬಳಿ 56,89,146 ರೂ. ನಗದನ್ನು ಸ್ಥಿರ ಕಣ್ಗಾವಲು ತಂಡದವರು ಚಿತ್ರದುರ್ಗದ ಪಿಳ್ಳೇಕೇರನಹಳ್ಳಿ ಚೆಕ್ ಪೋಸ್ಟ್ ನಲ್ಲಿ 20,35,000 ನಗದನ್ನು ವಶಪಡಿಸಿಕೊಂಡಿದ್ದಾರೆ. ತರೀಕೆರೆ ತಾಲ್ಲೂಕಿನ ಎಂ.ಸಿ.ಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸ್ಥಿರ ಕಣ್ಗಾವಲು ತಂಡದವರು 4,21,92,752 ರೂ. ಮೌಲ್ಯದ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದೆ.
eesanje/url_46_193_8.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ 12 ಹಾಲಿ ಸಂಸದರಿಗೆ ಗೇಟ್‍ಪಾಸ್ : ಸೋತವರು, ಮಾಜಿ ಸಿಎಂಗಳಿಗೆ ಬಿಜೆಪಿ ಚಾನ್ಸ್
2
+ ಬೆಂಗಳೂರು,ಮಾ.28-ಓರ್ವ ಕೇಂದ್ರದ ಹಾಲಿ ಸಚಿವ ಸೇರಿದಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 12 ಮಂದಿ ಹಾಲಿ ಸಂಸದರಿಗೆ ಗೇಟ್‍ಪಾಸ್ ನೀಡಿದೆ.ಮೂವರು ಸಂಸದರ ರಾಜಕೀಯ ನಿವೃತ್ತಿ ಸೇರಿದಂತೆ 12 ಮಂದಿ ಸಂಸದರಿಗೆ ಟಿಕೆಟ್ ನೀಡಲು ನಿರಾಕರಿಸಿದ್ದು, ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.
3
+ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. 2019ರಲ್ಲಿ ಗೆದ್ದಿದ್ದ 12 ಮಂದಿ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಇಬ್ಬರು ಹಾಗೂ 10 ಯುವ ಮುಖಗಳಿಗೆ ಮನ್ನಣೆ ನೀಡಲಾಗಿದೆ.
4
+ ಬೆಳಗಾವಿ(ಮಂಗಳ ಸುರೇಶ್ ಅಂಗಡಿ), ಹಾವೇರಿ(ಶಿವಕುಮಾರ್ ಉದಾಸಿ), ಬಳ್ಳಾರಿ(ದೇವೇಂದ್ರಪ್ಪ), ದಾವಣಗೆರೆ(ಜಿ.ಎಂ.ಸಿದ್ದೇಶ್ವರ್), ಕೊಪ್ಪಳ(ಕರಡಿ ಸಂಗಣ್ಣ), ಚಿತ್ರದುರ್ಗ(ಎ.ನಾರಾಯಣಸ್ವಾಮಿ), ದಕ್ಷಿಣಕನ್ನಡ(ನಳೀನ್‍ಕುಮಾರ್ ಕಟೀಲ್), ಉತ್ತರಕನ್ನಡ (ಅನಂತಕುಮಾರ್ ಹೆಗಡೆ), ಬೆಂಗಳೂರು ಉತ್ತರ (ಸದಾನಂದಗೌಡ), ಮೈಸೂರು-ಕೊಡುಗು (ಪ್ರತಾಪ್ ಸಿಂಹ), ಕೋಲಾರ(ಮುನಿಸ್ವಾಮಿ).
5
+ ಮೈತ್ರಿಯಾಗಿರುವ ಕಾರಣ ಕಳೆದ ಬಾರಿ ಗೆದ್ದಿದ್ದ ಕೋಲಾರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವ ಕಾರಣ ಹಾಲಿ ಸಂಸದ ಮುನಿಸ್ವಾಮಿಗೂ ಟಿಕೆಟ್ ಕೈತಪ್ಪಿದೆ. ವಯಸ್ಸಿನ ಹಿನ್ನಲೆ, ಆರೋಗ್ಯದ ಕಡೆ ಗಮನ, ವೈಯಕ್ತಿಕ ಕಾರಣಗಳಿಂದಾಗಿ ಜಿ.ಎಚ್.ಬಸವರಾಜ್(ತುಮಕೂರು), ಬಿ.ಎನ್.ಬಚ್ಚೇಗೌಡ(ಚಿಕ್ಕಬಳ್ಳಾಪುರ) ಹಾಗೂ ವಿ.ಶ್ರೀನಿವಾಸ್ ಪ್ರಸಾದ್(ಚಾಮರಾಜನಗರ) ಇವರುಗಳು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.
6
+ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಏಳು ಮಂದಿಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣೆ ಹಾಕಿದೆ. ಗೋವಿಂದ ಕಾರಜೋಳ(ಚಿತ್ರದುರ್ಗ), ಬಿ.ಶ್ರೀರಾಮುಲು (ಬಳ್ಳಾರಿ), ವಿಶ್ವೇಶ್ವರ ಹೆಗಡೆ ಕಾಗೇರಿ(ಉತ್ತರಕನ್ನಡ) ಬಸವರಾಜ ಬೊಮ್ಮಾಯಿ( ಹಾವೇರಿ), ಡಾ.ಕೆ.ಸುಧಾಕರ್(ಚಿಕ್ಕಬಳ್ಳಾಪುರ), ವಿ.ಸೋಮಣ್ಣ(ತುಮಕೂರು), ಜಗದೀಶ್ ಶೆಟ್ಟರ್(ಬೆಳಗಾವಿ) ಸ್ಪರ್ಧೆ ಮಾಡಿದ್ದಾರೆ.
7
+ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಿರುವುದು ವಿಶೇಷವಾಗಿದೆ. ಬೆಂಗಳೂರು ಉತ್ತರ -ಶೋಭಾ ಕರಂದ್ಲಾಜೆ, ದಾವಣಗೆರೆ- ಗಾಯತ್ರಿ ಸಿದ್ದೇಶ್ವರ್ ಕಣಕ್ಕಿಳಿದಿದ್ದಾರೆ. ಉಡುಪಿ-ಚಿಕ್ಕಮಂಗಳೂರು ಪ್ರತಿನಿಧಿಸುತ್ತಿದ್ದ ಶೋಭಾ ಕರಂದ್ಲಾಜೆಗೆ ತೀವ್ರ ವಿರೋಧಿ ಅಲೆ ಇರುವುದರಿಂದ ಬೆಂಗಳೂರು ಉತ್ತರದಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
8
+ ಇನ್ನು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿರುವುದು ವಿಶೇಷ ಎನಿಸಿದೆ. ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಿಂದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್, ಚಾಮರಾಜನಗರದಿಂದ ಬಾಲರಾಜ್ ಸ್ಪರ್ಧೆ ಮಾಡಿದ್ದಾರೆ. ದಕ್ಷಿಣ ಕನ್ನಡದಿಂದ ನಿವೃತ್ತ ಸೇನಾಧಿಕಾರಿ ಬ್ರಿಜೇಶ್ ಚೌಟ, ಕೊಪ್ಪಳದಿಂದ ಬಸವರಾಜ್ ಕಾವಟಗಿ ಸ್ರ್ಪಧಿಸಿದ್ದಾರೆ.
9
+ ಈವರೆಗೂ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಪ್ರವೇಶಿಸಿದ್ದ ಕೋಟಾ ಶ್ರೀನಿವಾಸ ಪೂಜಾರಿ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮೊದಲ ಬಾರಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ.
10
+ ಟಿಕೆಟ್ ಕೈತಪ್ಪಿದವರು1- ಅನಂತ್ ಕುಮಾರ್ ಹೆಗಡೆ2- ಪ್ರತಾಪ್ ಸಿಂಹ3- ನಳೀನ್ ಕುಮಾರ್ ಕಟೀಲ್4- ಮಂಗಳಾ ಅಂಗಡಿ5- ಬಸವರಾಜ್ ( ತುಮಕೂರು) ನಿವೃತ್ತಿ6 – ಶ್ರೀನಿವಾಸ್ ಪ್ರಸಾದ್ ( ನಿವೃತ್ತಿ7- ಶಿವಕುಮಾರ್ ಉದಾಸಿ ( ನಿವೃತ್ತಿ)8- ನಾರಾಯಣ್ ಸ್ವಾಮಿ ( ಆಸಕ್ತಿ ಇರಲಿಲ್ಲ)9- ಬಚ್ಚೆಗೌಡ ( ನಿವೃತ್ತಿ)10- ಕರಡಿ ಸಂಗಣ್ಣ11- ಸದಾನಂದ ಗೌಡ12 – ದೇವೆಂದ್ರಪ್ಪ
11
+ ಸೋತವರಿಗೆ ಮಣೆ1.ವಿಶ್ವೇಶ್ವರ ಹೆಗಡೆ ಕಾಗೇರಿ – ಉತ್ತರ ಕನ್ನಡ2.ಗೋವಿಂದ ಕಾರಜೋಳ – ಚಿತ್ರದುರ್ಗ3.ಡಾ. ಕೆ ಸುಧಾಕರ್ – ಚಿಕ್ಕಬಳ್ಳಾಪುರ4.ವಿ ಸೋಮಣ್ಣ – ತುಮಕೂರು5.ಜಗದೀಶ್ ಶೆಟ್ಟರ್ – ಬೆಳಗಾವಿ.8.ಶ್ರೀರಾಮಲು – ಬಳ್ಳಾರಿ
12
+ ಇಬ್ಬರು ಮಾಜಿ ಸಿಎಂಗಳುಜಗದೀಶ್ ಶೆಟ್ಟರ್-ಬೆಳಗಾವಿಬಸವರಾಜ ಬೊಮ್ಮಾಯಿ- ಹಾವೇರಿ
13
+ ನಿವೃತ್ತಿಯಾದವರುವಿ.ಶ್ರೀನಿವಾಸ್ ಪ್ರಸಾದ್ಬಿ.ಎನ್.ಬಚ್ಚೇಗೌಡಜಿ.ಎಚ್.ಬಸವರಾಜ್
eesanje/url_46_193_9.txt ADDED
@@ -0,0 +1,6 @@
 
 
 
 
 
 
 
1
+ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಒಳ ಹೊಡೆತದ ಭೀತಿ
2
+ ಬೆಂಗಳೂರು,ಮಾ.27-ಟಿಕೆಟ್ ಘೋಷಣೆಯಾದ ನಂತರ ಪಕ್ಷದ ವರಿಷ್ಠರ ವಿರುದ್ಧವೇ ತಿರುಗಿಬಿದ್ದಿದ್ದ ಅಸಮಾಧಾನಿತರ ಭಿನ್ನಮತ ಬಗೆಹರಿಯಲಿದೆ ಎಂದು ಹೇಳಲಾಗುತ್ತಿದೆಯಾದರೂ ಪರಿಸ್ಥಿತಿ ಮಾತ್ರ ಈಗಲೂ ಬೂದಿಮುಚ್ಚಿದ ಕೆಂಡದಂತಿದೆ.ದಾವಣಗೆರೆ, ಬೆಳಗಾವಿ, ಕೊಪ್ಪಳ, ಬೀದರ್, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ಮತ್ತಿತರ ಕಡೆ ಬಿಕ್ಕಟ್ಟು ಶಮನವಾಗಿದೆ ಎಂದು ಪಕ್ಷದ ಮುಖಂಡರು ಬಿಂಬಿಸುತ್ತಿದ್ದರೂ ಒಳಗಡೆ ಮಾತ್ರ ಒಳ ಹೊಡೆತದ ಭೀತಿ ಧಿಕೃತ ಅಭ್ಯರ್ಥಿಗಳಿಗೆ ಎದುರಾಗಿದೆ.
3
+ ಯಾವುದೇ ಕ್ಷಣದಲ್ಲೂ ಭಿನ್ನಮತ ಆಸ್ಪೋಟಗೊಳ್ಳುವ ಸಾಧ್ಯತೆಯಿದ್ದು, ಮತದಾನಕ್ಕೂ ಮುನ್ನವೇ ಬಿಜೆಪಿಗೆ ದುಬಾರಿಯಾದರೂ ಅಚ್ಚರಿ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.ಜಿಲ್ಲಾ ಘಟಕದ ತೀರ್ಮಾನದ ವಿರುದ್ಧವೇ ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಮಧ್ಯಪ್ರವೇಶಿಸಿ ಅಸಮಧಾನಿತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
4
+ ಆದರೆ ಹಾವು-ಮುಂಗುಸಿಯಂತಿದ್ದ ಸಿದ್ದೇಶ್ವರ್ ಮತ್ತು ಎಸ್.ಎ.ರವೀಂದ್ರನಾಥ್ ಬಣ ಪರಸ್ಪರ ಕೈಜೋಡಿಸಿ ಮತಯಾಚನೆ ಮಾಡುತ್ತಾರೆ ಎಂಬುದು ಊಹೆಗೆ ನಿಲುಕದ ಪ್ರಶ್ನೆಯಾಗಿದೆ. ಮಾಜಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ ಈಗಲೂ ಸಿದ್ದೇಶ್ವರ್ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಬೆಳಗಾವಿಯಲ್ಲೂ ಜಗದೀಶ್ ಶೆಟ್ಟರ್ಗೆ ಟಿಕೆಟ್ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಹಲವರು ಶೆಟ್ಟರ್ಗೆ ನಮ್ಮ ಬೆಂಬಲ ಇಲ್ಲ ಎಂದು ತೀರ್ಮಾನಕ್ಕೆ ಬಂದಿದ್ದಾರೆ.
5
+ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಆಕಾಂಕ್ಷಿಗಳಾದ ಮಹಾಂತೇಶ್ ಕವಟಗಿ ಮಠ, ರಮೇಶ್ ಕತ್ತಿ ಸೇರಿದಂತೆ ಅನೇಕರು ಮುನಿಸಿಕೊಂಡಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ಬುಧವಾರ ಜಿಲ್ಲೆಯ ಪ್ರಮುಖರ ಜೊತೆ ಸಭೆ ನಡೆಸಿ ಎಲ್ಲರೂ ಶೆಟ್ಟರ್ಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿಕೊಂಡರು. ಸದ್ಯಕ್ಕೆ ಬಿಕ್ಕಟ್ಟು ಶಮನವಾಗಿದೆ ಎಂದು ಹೇಳಲಾಗುತ್ತಿದೆಯಾದರೂ ಶೆಟ್ಟರ್ಗೆ ಟಿಕೆಟ್ ನೀಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
6
+ ಉಡುಪಿ ಚಿಕ್ಕಮಗಳೂರಿನಲ್ಲೂ ಪರಿಸ್ಥಿತಿ ಶಾಂತವಾಗಿದೆ ಎಂದು ಹೇಳಲಾಗುತ್ತಿದೆಯಾದರೂ ಮುಖಂಡರ ಮುನಿಸು ಮಾತ್ರ ಶಮನವಾಗುತ್ತಿಲ್ಲ. ಅದರಲ್ಲೂ ಮಾಜಿ ಸಚಿವ ಸಿ.ಟಿ.ರವಿ ಬೆಂಬಲಿಗರು ಈಗಲೂ ಪಕ್ಷದ ಪರವಾಗಿ ಕೆಲಸ ಮಾಡಲು ಒಪ್ಪುತ್ತಿಲ್ಲ. ತುಮಕೂರಿನಲ್ಲಿ ಟಿಕೆಟ್ ಸಿಗದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹ���ರಹಾಕಿದ್ದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕೋಪ ನಿಧಾನವಾಗಿ ತಣ್ಣಗಾಗಿದೆ.
eesanje/url_46_194_1.txt ADDED
@@ -0,0 +1,5 @@
 
 
 
 
 
 
1
+ ಡಿಕೆಶಿ ಸಿಎಂ ಆಗಲೆಂದು ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಕೆ
2
+ ಬೆಂಗಳೂರು, ಮಾ.27-ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸುವುದಕ್ಕೂ ಮುನ್ನಾ ಹಲವು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಆತ್ಮಲಿಂಗ ಪೂಜೆ ನೇರವೇರಿಸಿದರು.
3
+ ಈ ವೇಳೆ ಅರ್ಚಕರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದರು. ಇತ್ತೀಚೆಗೆ ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಜಾರಿ ನಿರ್ದೇಶನದ ಪ್ರಕರಣದಿಂದ ಮುಕ್ತರಾದ ಡಿ.ಕೆ.ಶಿವಕುಮಾರ್ , ದೇವಸ್ಥಾನಗಳ ಭೇಟಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳ ಪ್ರಮುಖ ದೇವಾಲಯಗಳಿಗೆ ನಿನ್ನೆಯಿಂದ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ.
4
+ ಇಂದು ಗೋಕರ್ಣ ಹಾಗೂ ಕುಮಟಾದ ಗಣೇಶ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ. ನಂತರ ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. ಗೋಕರ್ಣದಲ್ಲಿನ ಪೂಜೆಯ ವೇಳೆಯಲ್ಲಿನ ಸಂಕಲ್ಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ.
5
+ ಕೆಲವರು ನನ್ನನ್ನ ಸಿಎಂ ಆಗಲಿ ಎಂದು ಹೇಳುತ್ತಾರೆ. ಅವರ ಬಾಯಲ್ಲಿ ಬರುವುದನ್ನ ತಪ್ಪಿಸಲು ಸಾಧ್ಯವೇ? ಅರ್ಚಕರು, ಶಿಷ್ಯಂದಿರು, ಹಿತೈಶಿಗಳು ಸೇರಿ ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ ಎಂದರು.ಪೂಜೆಯ ವೇಳೆ ಸಚಿವ ಮಂಕಾಳ ಸುಬ್ಬುವೈದ್ಯ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
eesanje/url_46_194_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ : ಪರಮೇಶ್ವರ್
2
+ ಬೆಂಗಳೂರು,ಮಾ.26-ಬಿಜೆಪಿ ಸೋಲಿನ ಭಯದಿಂದ ಗಾಬರಿಯ ವಾತಾವರಣದಲ್ಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ಧನ್ ರೆಡ್ಡಿಯವರನ್ನು ಪಕ್ಷಕ್ಕೆ ಸೇರಿಸಿಕೊಂಡ ಕುರಿತು ಪ್ರತಿಕ್ರಿಯಿಸಿದರು.
3
+ ಒಂದು ಕಾಲದಲ್ಲಿ ಜನಾರ್ದನರೆಡ್ಡಿಗೂ ನಮಗೂ ಸಂಬಂಧವಿಲ್ಲ ಎಂದು ದೆಹಲಿಯಿಂದ ಬೆಂಗಳೂರಿನವರೆಗೆ ಎಲ್ಲಾ ಮುಖಂಡರೂ ಹೇಳಿಕೆ ನೀಡಿದ್ದರು. ಈಗ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದ ಮಾತ್ರಕ್ಕೆ ಅವರು ಮಾಡಿದ ಕಾನೂನು ಬಾಹಿರ ಕೆಲಸಗಳು ಮರೆತುಹೋಯಿತೇ? ಬಿಜೆಪಿಗೆ ಸೇರಿದಾಕ್ಷಣ ಎಲ್ಲವೂ ಖುಲಾಸೆಯಾದವೇ? ಎಂದು ಪ್ರಶ್ನಿಸಿದರು.
4
+ ಬಿಜೆಪಿಯವರು ಸೋಲಿನ ಭಯದಿಂದ ಗಾಬರಿಯ ವಾತಾವರಣದಲ್ಲಿದ್ದಾರೆ. ಅದಕ್ಕಾಗಿ ಈ ಮೊದಲು ದೂರ ಇಟ್ಟವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ಲೋಕಸಭಾ ಚುನಾವಣೆಗೂ ಮುನ್ನ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿಕೆ ನೀಡಿದ್ದರು. ಅದರಂತೆ ನಡೆದುಕೊಂಡಿಲ್ಲ. ಪ್ರಧಾನಿಯವರೇ ಸುಳ್ಳು ಹೇಳಿದ್ದಾರೆ ಎಂದು ನಾವು ಜನರ ಮುಂದೆ ಹೇಳುತ್ತಿದ್ದೇವೆ. ಸಚಿವ ಶಿವರಾಜ ತಂಗಡಗಿ ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಬಾರಿಸಬೇಕು ಎಂದು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದರು.
5
+ ಯಾವುದೇ ಪಕ್ಷದವರಾದರೂ ಕೇಂದ್ರ ಚುನಾವಣಾ ಆಯೋಗದ ನಿಯಮಾವಳಿಗಳನ್ನು ಪಾಲನೆ ಮಾಡಬೇಕು. ನೀತಿಸಂಹಿತೆ ಉಲ್ಲಂಘಿಸಬಾರದು. ಒಂದು ವೇಳೆ ಶಿವರಾಜ ತಂಗಡಗಿ ಹೇಳಿಕೆಯಲ್ಲಿ ಪ್ರಚೋದನಾಕಾರಿ ಅಂಶಗಳಿದ್ದರೆ ಚುನಾವಣಾ ಆಯೋಗವೇ ಗಮನಿಸುತ್ತದೆ. ಅಗತ್ಯ ಕಂಡುಬಂದರೆ ಪ್ರಕರಣಗಳನ್ನು ದಾಖಲಿಸುತ್ತದೆ. ಈಗಾಗಲೇ ಈ ರೀತಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.
6
+ ಶಿವರಾಜ ತಂಗಡಗಿ ಹೇಳಿಕೆಯಿಂದ ಗಲಾಟೆಯಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದರ ಹಿಂದಿನ ಉದ್ದೇಶವೇನು? ಬಹುಶಃ ಅವರೇ ಗಲಾಟೆ ಮಾಡಿಸಲು ಸಿದ್ಧರಾಗಿರಬಹುದು. ಒಂದು ವೇಳೆ ಅಂತಹ ಪ್ರಯತ್ನಗಳಾದರೆ ಅದಕ್ಕೆ ತಕ್ಕ ಕ್ರಮ ಕೈಗೊಳ್ಳಲು ನಮ್ಮ ವ್ಯವಸ್ಥೆ ಸಿದ್ಧವಾಗಿದೆ ಎಂದು ಗೃಹಸಚಿವರು ಎಚ್ಚರಿಸಿದರು.
7
+ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತಗಳಿಲ್ಲ. ಬಹಳಷ್ಟು ಮಂದಿ ಅರ್ಜಿ ಹಾಕಿದ್ದರು. ಹೈಕಮಾಂಡ್ ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಅವಕಾಶ ವಂಚಿತರು ಎರಡು-ಮೂರು ದಿನ ಬೇಸರದಲ್ಲಿರುತ್ತಾರೆ. ಅನಂತರ ಸರಿ ಹೋಗುತ್ತಾರೆ. ತುಮಕೂರಿನಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಲಿಖಿತ್ ರಾಜ್ ಮೌರ್ಯ ಮತ್ತು ಮುರಳೀಧರ ಹಾಲಪ್ಪನವರು ಈಗ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ.
8
+ ಜಿಲ್ಲೆಯಲ್ಲಿ 8 ಲೋಕಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಒಂದು ಸುತ್ತಿನ ಪ್ರಚಾರ ಕಾರ್ಯ ನಡೆದಿದೆ. ಕಾರ್ಯಕ್ರಮಗಳಲ್ಲಿ ಲಿಖಿತ್ ರಾಜ್ ಮೌರ್ಯ ಮತ್ತು ಮುರಳೀಧರ ಹಾಲಪ್ಪ ಭಾಗವಹಿಸಿ ಭಾಷಣ ಮಾಡಿದ್ದಾರೆ. ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ವಿವರಿಸಿದರು. ಬಿಜೆಪಿಯ ನಾಯಕ ಜೆ.ಸಿ.ಮಾಧುಸ್ವಾಮಿ ಅವರು ಬಿಜೆಪಿ ವಿರುದ್ಧ ವ್ಯಕ್ತಪಡಿಸುವ ಅಸಮಾಧಾನದ ಬಗ್ಗೆ ನಾನು ಪ್ರತಿಕ್ರಿಯಿಸಲಾಗುವುದಿಲ್ಲ. ಅವರ ಪರವಾದ ವಕ್ತಾರಿಕೆ ಮಾಡಲು ನಾವು ಸಿದ್ಧರಿಲ್ಲ ಎಂದು ಹೇಳಿದರು.
9
+ ಕೋಲಾರ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಆಯ್ಕೆ ಮಾಡಲಾಗುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೊಂದಾಣಿಕೆ ಮಾಡುವುದು ಸಾಮಾನ್ಯ. ಆಕಾಂಕ್ಷಿಗಳನ್ನು ನಿರ್ಲಕ್ಷಿಸಿ ಪಕ್ಷ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅದಕ್ಕಾಗಿ ಚರ್ಚೆಗಳು ನಡೆಯುತ್ತಿವೆ ಎಂದರು.
eesanje/url_46_194_11.txt ADDED
@@ -0,0 +1,7 @@
 
 
 
 
 
 
 
 
1
+ ಮೈತ್ರಿ ಧರ್ಮಕ್ಕೆ ಬದ್ಧರಾಗಿರುವಂತೆ ಕಾರ್ಯಕರ್ತರಿಗೆ ಕುಮಾರಸ್ವಾಮಿ ಕರೆ
2
+ ಬೆಂಗಳೂರು, ಮಾ.26- ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತತ್ವ, ಸಿದ್ಧಾಂತ ಬದ್ಧತೆಗೆ ಧಕ್ಕೆಯಾಗದ ರೀತಿಯಲ್ಲಿ ಮೈತ್ರಿಧರ್ಮ ಪಾಲನೆ ಮಾಡುವ ಮೂಲಕ ಪ್ರಚಾರ ಕೈಗೊಳ್ಳಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.ಈ ಸಂಬಂಧ ಸಲಹಾ ರೂಪದ ಮಾರ್ಗಸೂಚಿ ಪತ್ರವನ್ನು ಲೋಕಸಭಾ ಉಸ್ತುವಾರಿ ನಾಯಕರು, ಸಹ ನಾಯಕರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳಿಗೆ ಬರೆದಿದ್ದಾರೆ.
3
+ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ರ್ಪಧಿ ಸಲಿದ್ದಾರೆ. ಚುನಾವಣೆಯಲ್ಲಿ ಎರಡೂ ಪಕ್ಷಗಳು ರಾಷ್ಟ್ರೀಯ ಬದ್ಧತೆ ಮತ್ತು ಸುರಕ್ಷತೆಗಾಗಿ ಪರಸ್ಪರ ಬೆಂಬಲಿಸಬೇಕಾಗಿದೆ ಎಂದು ಹೇಳಿದ್ದಾರೆ.
4
+ ಪ್ರಚಾರ ಸಭೆಯಲ್ಲಿ ಎರಡೂ ಪಕ್ಷಗಳು ತಮ್ಮ ಪಕ್ಷದ ಚಿಹ್ನೆಗಳನ್ನು ಸಮ ಅಳತೆಯಲ್ಲಿ ಬಳಸಬೇಕು. ಸಾರ್ವಜನಿಕ ಸಭೆಗಳಲ್ಲಿ ಎರಡೂ ಪಕ್ಷಗಳ ಬಾವುಟವನ್ನು ಪ್ರದರ್ಶಿ ಬೇಕು. ಜೆಡಿಎಸ್ ಮತ್ತು ಬಿಜೆಪಿ ನಾಯಕರ ಭಾವಚಿತ್ರವನ್ನು ಭೇದ ವಿಲ್ಲದೆ ಉಪಯೋಗಿಸಬೇಕು ಎಂಬ ಸಲಹೆಯನ್ನು ಅವರು ಪತ್ರದಲ್ಲಿ ಮಾಡಿದ್ದಾರೆ.
5
+ ಸಭೆಗಳಲ್ಲಿ ಎರಡೂ ಪಕ್ಷಗಳ ಕಾರ್ಯ ಕರ್ತರು ತಮ್ಮತಮ್ಮ ಪಕ್ಷದ ಸಾಲುಗಳನ್ನು ಕಡ್ಡಾಯವಾಗಿ ಬಳಸಬೇಕು. ರಾಷ್ಟ್ರ ಮತ್ತು ರಾಜ್ಯಮಟ್ಟದ ಉಭಯ ಪಕ್ಷಗಳ ನಾಯಕರ ಸಾಧನೆಗಳನ್ನು ಬಳಸಿಕೊಳ್ಳಬೇಕು. ಮತದಾರರ ಮನವೊಲಿಸಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಮತದಾನ ಮಾಡುವಂತೆ ಪ್ರಯತ್ನಿಸಬೇಕು. ಒಂದು ವೇಳೆ ಪ್ರಚಾರ ಸಭೆಗಳಲ್ಲಿ ಗೊಂದಲ ಅಥವಾ ಕಠಿಣ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ಕೇಂದ್ರ ಕಚೇರಿಗೆ ತಂದು ಪರಿಹರಿಸಿಕೊಳ್ಳಬೇಕು. ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದ್ದಾರೆ.
6
+ ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಗಳಲ್ಲಿ ಆಯೋಜಿಸುವ ಸಾರ್ವಜನಿಕ ಸಭೆ ಮತ್ತು ಪ್ರಚಾರ ಸಭೆಗಳಲ್ಲಿ ಎರಡೂ ಪಕ್ಷದ ನಾಯಕರು ಯಾವುದೇ ವಿವಾದಾತ್ಮಕ ಹೇಳಿಕೆಗಳಿಗೆ ಆಸ್ಪದ ನೀಡದೆ ಸಮನ್ವಯತೆಯಿಂದ ಚುನಾವಣೆ ನಡೆಸಬೇಕು. ಮೈತ್ರಿ ಅಭ್ಯರ್ಥಿಗಳ ಬಗ್ಗೆ ಯಾವುದೇ ಅಸಮಾಧಾನವನ್ನು ಯಾವುದೇ ಸಂದರ್ಭದಲ್ಲೂ ವ್ಯಕ್ತಪಡಿಸಬಾರದು.
7
+ ಜೆಡಿಎಸ್ ಕಾರ್ಯಕರ್ತರು ಸಮನ್ವಯತೆಗೆ ಒತ್ತು ನೀಡಬೇಕು. ಯಾವುದೇ ವ್ಯಕ್ತಿ ಸಮಾಜ ಅಥವಾ ಧರ್ಮನಿಂದನೆಗೆ ಅವಕಾಶ ನೀಡಬಾರದು. ಪಕ್ಷದ ಜನಪರ ಹೋರಾಟಗಳಾದ ಕನ್ನಡ, ಪ್ರಾದೇಶಿಕತೆ, ಜಾತ್ಯತೀತತೆ, ನೀರಾವರಿ ಮತ್ತು ರೈತಪರವಾದ ನಿಲುವುಗಳ ಪ್ರಚಾರ��್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
eesanje/url_46_194_12.txt ADDED
@@ -0,0 +1,8 @@
 
 
 
 
 
 
 
 
 
1
+ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಪರ-ವಿರೋಧದ ಚರ್ಚೆ
2
+ ಬೆಂಗಳೂರು,ಮಾ.26-ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕಿಚ್ಚು ಹಚ್ಚಿದ್ದು, ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುವಾಗ ಶಿವರಾಜ್ ತಂಗಡಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಆದರೂ ಕೆಲ ಯುವಕರು ಮೋದಿಯವರ ಅಭಿಮಾನಿಯಾಗಿದ್ದಾರೆ. ಮೋದಿ ಮೋದಿ ಎಂದು ಕೂಗುತ್ತಿರುತ್ತಾರೆ. ಅಂತವರ ಕಪಾಳಕ್ಕೆ ಬಾರಿಸಬೇಕು ಎಂದು ಶಿವರಾಜ್ ತಂಗಡಗಿ ಹೇಳಿಕೆ ನೀಡಿದ್ದರು.
3
+ ಬಿಜೆಪಿ ಇದನ್ನೇ ಬಳಸಿಕೊಂಡು ಅಲ್ಲಲ್ಲಿ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ನಾಯಕರು ತಂಗಡಗಿ ಯವರ ಬೆಂಬಲಕ್ಕೆ ನಿಂತಿದ್ದಾರೆ.2014 ರಿಂದಲೂ ಮೋದಿ ಮೋದಿ ಎಂಬ ಘೋಷಣೆಗಳು ಕಾಂಗ್ರೆಸ್ಸಿಗರ ಪಾಲಿಗೆ ತೀವ್ರ ಮುಜುಗರದ ಸಂಗತಿ ಯಾಗಿವೆ. ಕಾಂಗ್ರೆಸ್ ಕಾರ್ಯ ಕ್ರಮಗಳಿಗೆ ನುಗ್ಗುವ ಬಿಜೆಪಿ ಯುವ ಕಾರ್ಯಕರ್ತರು ಇದ್ದಕ್ಕಿದ್ದಂತೆ ಮೋದಿ ಮೋದಿ ಎಂದು ಕೂಗಿ ಇರಿಸು ಮುರಿಸು ಮಾಡುವುದು ಸಾಮಾನ್ಯವಾಗಿದೆ.
4
+ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಾವಿರಾರು ಜನ ಸೇರಿದ್ದು, ಮೋದಿ ಅಭಿಮಾನಿಗಳ ಮೇಲೆ ತಿರುಗಿ ಬೀಳುವ ಆತಂಕದ ವಾತಾವರಣ ಬಹಳಷ್ಟು ಬಾರಿ ಕಂಡುಬಂದಿತ್ತು. ಆದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂಬ ಕಾರಣಕ್ಕೆ ಹಿರಿಯ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರನ್ನು ತಡೆದಿದ್ದರು. ಹೀಗಾಗಿ ಹಲವು ಬಾರಿ ಮೋದಿ ಪರವಾದ ಘೋಷಣೆಗಳು ಮೊಳಗಿದರೂ ಕೂಡ ಎಲ್ಲಿಯೂ ಕಾಂಗ್ರೆಸ್ಸಿಗರು ತಿರುಗೇಟು ನೀಡಿದ ಉದಾಹರಣೆಗಳಿಲ್ಲ.
5
+ ಆದರೆ ಇದೇ ನೆಪದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಪ್ರಭಾವಿ ನಾಯಕರು ಭಾಗವಹಿಸಿದ್ದ ಕಾರ್ಯ ಕ್ರಮಗಳಲ್ಲೂ ಮೋದಿಪರವಾದ ಘೋಷಣೆಗಳನ್ನು ಕೂಗಿದ ಉದಾ ಹರಣೆಗಳಿವೆ. ಈ ರೀತಿ ಘೋಷಣೆ ಕೂಗುವವರಿಗೆ ಸ್ಥಳದಲ್ಲೇ ತಕ್ಕ ಪಾಠ ಕಲಿಸಬೇಕು ಎಂದು ಹಲವಾರು ಸಭೆಗಳಲ್ಲಿ ಚರ್ಚೆಯಾಗಿದೆ ಎಂದು ಮೂಲಗಳೂ ತಿಳಿಸಿವೆ.
6
+ ಆದರೆ ಮೋದಿ ಅಭಿಮಾನಿಗಳಿಗೆ ತತ್ಕ್ಷಣದ ಪ್ರತಿಕ್ರಿಯೆ ನೀಡಲು ಮುಂದಾದರೆ ಬಿಜೆಪಿ ಅದನ್ನು ರಾಜಕೀಯವಾಗಿ ಮತ್ತಷ್ಟು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಹಾಗಾಗಿ ಯಾರು, ಯಾವುದೇ ಘೋಷಣೆ ಕೂಗಿದರೂ ಪ್ರತಿಕ್ರಿಯಿಸಬಾರದೆಂದು ಹಿರಿಯ ನಾಯಕರು ತಮ್ಮ ಕಾರ್ಯಕರ್ತರಿಗೆ ತಿಳಿಹೇಳಿ ಸಮಾಧಾನ ಪಡಿಸಿದರು.
7
+ ಈ ರೀತಿಯ ಚರ್ಚೆಗಳು ಹಿರಿಯ ನಾಯಕರ ಸಮಾಧಾನ ಕಾಂಗ್ರೆಸ್ನಲ್ಲಿನ ಯುವಕಾರ್ಯಕರ್ತರ ಅಸಹನೆಗೆ ಕಾರಣವಾಗಿದೆ. ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆ ಆ ಅಸಹನೆಯ ಒಂದು ಭಾಗ ಎಂಬ ಚರ್ಚೆಗಳು ನಡೆಯು ತ್ತಿವೆ. ಒಂದು ವೇ���ೆ ಮೋದಿ ಪರವಾಗಿ ಘೋಷಣೆ ಕೂಗುವವರಿಗೆ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿ ಕ್ರಿಯಿಸಲಾರಂಭಿಸಿದರೆ ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂಬ ಆತಂಕ ಹಿರಿಯ ನಾಯಕರನ್ನು ಈಗಲೂ ಕಾಡುತ್ತಿದೆ. ಶಿವರಾಜ ತಂಗಡಗಿ ಒಂದು ಹೆಜ್ಜೆ ಮುಂದೆ ಹೋಗಿ ಮೋದಿ ಎನ್ನುವವರ ಕಪಾಳಕ್ಕೆ ಬಾರಿಸಬೇಕು ಎಂಬ ಹೇಳಿಕೆ ಪ್ರಚೋದನಾಕಾರಿ ಎಂದು ಬಿಜೆಪಿ ಆರೋಪಿಸಿದೆ.
8
+ ಇದನ್ನೇ ಮುಂದಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ಸಿಕ್ಕಸಿಕ್ಕಲ್ಲಿ ಮತ್ತೆ ಮೋದಿ ಮೋದಿ ಎಂಬ ಘೋಷಣೆ ಕೂಗಲಾರಂಭಿಸಿದ್ದಾರೆ. ಯಾವುದು ನಡೆಯಬಾರದು ಎಂಬ ತಾಳ್ಮೆಯಲ್ಲಿ ಕಾಂಗ್ರೆಸ್ ನಾಯಕರು ಇಷ್ಟೂ ದಿನ ತಮ್ಮ ಪಕ್ಷದ ಕಾರ್ಯಕರ್ತರನ್ನು ಸಮಾ ಧಾನಪಡಿಸುತ್ತಿದ್ದರೋ ಅದಕ್ಕೆ ಸಂಪುಟ ಸಚಿವರೇ ಕುಮ್ಮಕ್ಕು ನೀಡಿದಂತಾಗಿದೆ.
eesanje/url_46_194_2.txt ADDED
@@ -0,0 +1,5 @@
 
 
 
 
 
 
1
+ “ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಿದರೆ 5 ಶಾಸಕರು ರಾಜೀನಾಮೆ ನೀಡ್ತೀವಿ”
2
+ ಬೆಂಗಳೂರು, ಮಾ.27- ಸಚಿವ ಕೆ.ಹೆಚ್.ಮುನಿಯಪ್ಪ ಅವರ ಕುಟುಂಬಕ್ಕೆ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದರೆ, ಒಬ್ಬ ಸಚಿವರು ಸೇರಿದಂತೆ ಐವರು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್ ತಿಳಿಸಿದ್ದಾರೆ.
3
+ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಹೆಚ್.ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್ ನೀಡಿದರೇ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿಧಾನ ಪರಿಷತ್‍ನ ಕಾಂಗ್ರೆಸ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹ್ಮದ್ ರಾಜೀನಾಮೆ ನೀಡುತ್ತೇವೆ ಎಂದಿದ್ದಾರೆ.
4
+ ಸಭಾಪತಿ ಬಸವರಾಜ ಹೊರಟ್ಟಿ ಅವರ ಭೇಟಿಗೆ 12 ಗಂಟೆಗೆ ಸಮಯ ಕೇಳಿದ್ದೇವೆ. ವಿಧಾನ ಪರಿಷತ್ ಸದಸ್ಯರು ರಾಜಿನಾಮೆ ನೀಡಲಿದ್ದಾರೆ. ಶಾಸಕರು ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ರನ್ನು ಭೇಟಿ ಮಾಡಿ ರಾಜೀನಾಮೆ ನೀಡಲಿದ್ದೇವೆ ಎಂದಿದ್ದಾರೆ.
5
+ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ಮದು ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧವಾಗಿದ್ದೇವೆ. ರಮೇಶ್ ಕುಮಾರ್ ಸೇರಿ ನಾವೆಲ್ಲಾ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದಿದ್ದಾರೆ.
eesanje/url_46_194_3.txt ADDED
@@ -0,0 +1,6 @@
 
 
 
 
 
 
 
1
+ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆಬಿದ್ದ ಇಬ್ಬರು ಪೊಲೀಸರು
2
+ ಬೆಂಗಳೂರು, ಮಾ.27-ಲಂಚಕ್ಕೆ ಕೈಯೊಡ್ಡಿದ್ದ ಹೆಡ್‌ಕಾನ್‌ಸ್ಟೆಬಲ್‌ ಸೇರಿದಂತೆ ಇಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪೀಣ್ಯದ ಎಸಿಪಿ ಕಚೇರಿ ಬಳಿ ಪೊಲೀಸ್ ಅಧಿಕಾರಿಯ ಜೀಪ್ ಚಾಲಕ ನಾಗರಾಜ್ ಮತ್ತು ಪೀಣ್ಯ ಪೊಲೀಸ್ ಠಾಣೆ ಹೆಡ್‍ಕಾನ್ಸ್‍ಟೆಬಲ್ ಗಂಗಹನುಮಯ್ಯ ಅವರು 50 ಸಾವಿರ ಲಂಚ ಪಡೆಯುವಾಗ ಇನ್ಸ್‍ಪೆಕ್ಟರ್ ವಿಜಯಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ನಗದು ಸಮೇತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
3
+ ಸುಂಕದಕಟ್ಟೆಯ ಮಾರುತಿನಗರದ ಚೇತನ್ ಎಂಬುವವರು ಗ್ಯಾಸ್ ಸಿಲಿಂಡರ್‍ಗಳ ಗೋದಾಮು ತೆರೆಯಲು ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಅನುಮತಿ ಪತ್ರ ನೀಡಲು 2 ಲಕ್ಷ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ಲೋಕಾಯುಕ್ತಕ್ಕೆ ಬಂದ ದೂರಿನ ಆಧಾರದ ಮೇಲೆ ಡಿವೈಎಸ್‍ಪಿ ಉಮಾದೇವಿ ಅವರ ನೇತೃತ್ವದಲ್ಲಿ ನಡೆದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ 50 ಸಾವಿರ ರೂ. ಲಂಚ ಪಡೆಯುವಾಗ ಹೆಡ್‌ಕಾನ್‌ಸ್ಟೆಬಲ್‌ ಹಾಗೂ ಜೀಪ್ ಚಾಲಕ ಸಿಕ್ಕಿಬಿದ್ದಿದ್ದಾರೆ.
4
+ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿಯ ಖಾನಾಪುರದ ಕಂದಾಯ ಇಲಾಖೆಯ ಎಇಇ ದುರದುಂಡೇಶ್ವರ ಬನ್ನೂರು ಅವರು 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ನೇರವಾಗಿ ಸಿಕ್ಕಿಬಿದ್ದಿದ್ದಾರೆ.
5
+ ಗ್ರಾಪಂ ಸದಸ್ಯ ವಿನಾಯಕ್ ಎಂಬುವವರು ಕಾಮಗಾರಿಯೊಂದರ ಅನುಮತಿ ನೀಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ಸಂಬಂಧ ಬಂದ ದೂರಿನನ್ವಯ ಇನ್ಸ್‍ಪೆಕ್ಟರ್ ರವಿಕುಮಾರ್ ಅವರ ನೇತೃತ್ವದ ತಂಡ ದಾಳಿ ನಡೆಸಿದಾಗ ಲಂಚ ಪಡೆಯುವ ವೇಳೆ 10 ಸಾವಿರದೊಂದಿಗೆ ಸಿಕ್ಕಿಬಿದ್ದಿದ್ದಾರೆ.
6
+ ಇದೇ ಸಂದರ್ಭದಲ್ಲಿ ಅವರ ಮನೆ ಮೇಲೂ ದಾಳಿ ನಡೆಸಿದ ಸಂದರ್ಭದಲ್ಲಿ 27.75 ಲಕ್ಷ ನಗದು ಪತ್ತೆಯಾಗಿದೆ. ಅಧಿಕಾರಿಯನ್ನು ಬಂಧಿಸಿ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
eesanje/url_46_194_4.txt ADDED
@@ -0,0 +1,8 @@
 
 
 
 
 
 
 
 
 
1
+ ಸಾಲುಸಾಲಾಗಿ ಕುಮಾರಸ್ವಾಮಿಯವರನ್ನು ಭೇಟಿ ಮಾಡುತ್ತಿರುವ ಬಿಜೆಪಿ ನಾಯಕರು
2
+ ಬೆಂಗಳೂರು, ಮಾ.27-ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿಯ ನಾಯಕರು ಹಾಗೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಒಬ್ಬರಾದ ಮೇಲೆ ಒಬ್ಬರಂತೆ ಭೇಟಿಯಾಗಿ ಬೆಂಬಲ ಕೋರುತ್ತಿದ್ದಾರೆ. ಜತೆಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಭರವಸೆ ನೀಡುತ್ತಿದ್ದಾರೆ.
3
+ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಂದ ನಂತರ ಕುಮಾರಸ್ವಾಮಿ ಅವರನ್ನು ರಾಜಕೀಯ ಮುಖಂಡರು ಭೇಟಿಯಾಗುವುದು ಸಾಮಾನ್ಯವಾಗಿದೆ. ಕಳೆದ ಸೋಮವಾರದಿಂದಲೂ ನಿತ್ಯ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುವುದರ ಜತೆಗೆ ಲೋಕಸಭೆ ಚುನಾವಣೆಗೆ ಸಹಕಾರ ಕೋರುವುದು ನಡೆಯುತ್ತಿದೆ.
4
+ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಟಿಕೆಟ್ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳು ತಮ್ಮ ತಮ್ಮ ಬೆಂಬಲಿಗರೊಂದಿಗೆ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ.
5
+ ಕ್ಷೇತ್ರಗಳಲ್ಲಿರುವ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ನಡುವಿನ ಗೊಂದಲ ಬಗೆಹರಿಸುವುದು. ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದು, ಜಂಟಿ ಪ್ರಚಾರ ಸಭೆಗಳನ್ನು ಹಮ್ಮಿಕೊಳ್ಳುವುದು ಸೇರಿದಂತೆ ಚುನಾವಣೆ ತಯಾರಿ ಕುರಿತಂತೆ ಸಮಾಲೋಚನೆ ನಡೆಸುತ್ತಿದ್ದಾರೆ.
6
+ ಇಂದು ಬೆಳಿಗ್ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲ ಕೋರಿದ್ಧಾರೆ. ಈಗಾಗಲೇ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಸಚಿವ ನಾರಾಯಣಗೌಡ, ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಶಾಸಕ ಎಸ್. ಮುನಿರಾಜು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.
7
+ ಈ ನಡುವೆ ಸಂಸದ ಮುನಿಸ್ವಾಮಿ ಅವರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್, ಸಂಸದ ಕರಡಿ ಸಂಗಣ್ಣ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ಚಂದ್ರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಕುಮಾರಸ್ವಾ��ಿ ಅವರನ್ನು ಭೇಟಿಯಾಗಿದ್ದಾರೆ. ಕೆಲವರು ಜೆಡಿಎಸ್ ಮುಖಂಡರೊಂದಿಗೆ ಭೇಟಿಯಾಗಿದ್ದಾರೆ. ಡಾ. ಸುಧಾರಕರ್ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
8
+ ಅದೇ ರೀತಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲ ಕೋರಿದ್ದಾರೆ. ಅಲ್ಲದೆ, ಹಾಸನ ಕ್ಷೇತ್ರದಲ್ಲಿನ ಬಿಜೆಪಿ ಮುಖಂಡರ ಅಸಮಾಧಾನ ಹೋಗಲಾಡಿಸುವಂತೆ ಮನವಿ ಮಾಡಿದ್ದಾರೆ,
eesanje/url_46_194_5.txt ADDED
@@ -0,0 +1,4 @@
 
 
 
 
 
1
+ ನಾಲಿಗೆ ಹರಿಬಿಟ್ಟಿದ್ದ ತಂಗಡಗಿ ವಿರುದ್ಧ ಎಫ್‍ಐಆರ್ ದಾಖಲು
2
+ ಬೆಂಗಳೂರು,ಮಾ.27-ಪ್ರಧಾನಿ ನರೇಂದ್ರಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರ ಹಿನ್ನಲೆಯಲ್ಲಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಚುನಾವಣಾ ಆಯೋಗ ಎಫ್‍ಐಆರ್ ದಾಖಲಿಸಿದೆ.
3
+ ಬಿಜೆಪಿ ನೀಡಿದ ದೂರಿನ ಮೇರೆಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾಗಿರುವ ತಂಗಡಿ ವಿರುದ್ಧ ಆಯೋಗ ಎಫ್‍ಐಆರ್ ದಾಖಲಿಸಿಕೊಂಡಿದೆ. ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಭಾಷಣ ಮಾಡುವ ವೇಳೆ ಸಚಿವ ತಂಗಡಗಿಯವರು ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕೆಂದು ಆವೇಷದಲ್ಲಿ ಹೇಳಿದ್ದರು.
4
+ ಇದನ್ನು ಅಸ್ತ್ರ ಮಾಡಿಕೊಂಡಿದ್ದ ಬಿಜೆಪಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.
eesanje/url_46_194_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಳೆ ಅಧಿಸೂಚನೆ
2
+ ಬೆಂಗಳೂರು,ಮಾ.27-ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟವಾದ ಎನ್‍ಡಿಎ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನಕ್ಕೆ ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ. ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
3
+ ನಾಳೆ ಅಯೋಗವು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬವೆಂದೇ ಹೇಳಲಾಗುವ ಮತಸಮರಕ್ಕೆ ಚಾಲನೆ ಸಿಗಲಿದೆ. ಏ.4 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.8ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಏ.26ರಂದು ಮತದಾನ ನಡೆದು ಜೂ.4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಕೇಂದ್ರ ಚುನಾವಣಾ ಆಯೋಗ ಎರಡು ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿದೆ.
4
+ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳು ನಾಳೆ ಅಧಿಸೂಚನೆ ಪ್ರಕಟವಾಗಲಿದ್ದು, ಚಿತ್ರದುರ್ಗ ಮಲೆನಾಡಿನ ಚಿಕ್ಕಮಗಳೂರು-ಉಡುಪಿ, ಹಾಸನ ಕರಾವಳಿ ಭಾಗದ ದಕ್ಷಿಣ ಕನ್ನಡ ಕ್ಷೇತ್ರ ಹೊರತುಪಡಿಸಿದರೆ ಬಹುತೇಕ ಹಳೆ ಮೈಸೂರು ಭಾಗದ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳಲ್ಲಿ ಕೋಲಾರ ಹಾಗೂ ಚಾಮರಾಜನಗರ ಪರಿಶಿಷ್ಟ ಜಾತಿಗೆ (ಎಸ್.ಸಿ) ಮೀಸಲು ಕ್ಷೇತ್ರಗಳಾಗಿದ್ದರೆ, ಉಳಿದ 12 ಕ್ಷೇತ್ರಗಳು ಸಾಮಾನ್ಯ ಕ್ಷೇತ್ರಗಳಾಗಿವೆ.
5
+ 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಯುಪಿಎ ಮೈತ್ರಿಕೂಟ ಬಿಜೆಪಿಗೆ ಪ್ರಬಲ ಸ್ಪರ್ಧೆ ನೀಡುವಲ್ಲಿ ವಿಫಲವಾಗಿತ್ತು. ಬೆಂಗಳೂರು ಗ್ರಾಮಾಂತರ, ಹಾಸನ ಕ್ಷೇತ್ರಗಳಲ್ಲಿ ಮೈತ್ರಿಕೂಟ ಗೆದ್ದರೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿಜೇತರಾಗಿದ್ದರು. ಉಳಿದಂತೆ 11 ಕ್ಷೇತ್ರಗಳಲ್ಲೂ ಪ್ರಧಾನಿ ನರೇಂದ್ರಮೋದಿ ಅಲೆಯಲ್ಲಿ ಬಿಜೆಪಿ ಗೆದ್ದು ಬೀಗಿತ್ತು.
6
+ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಅಕಾರದಲ್ಲಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಕಾಂಗ್ರೆಸ್‍ಗೆ ಕಳೆದ 10 ದಿನಗಳ ಅವಧಿಯಲ್ಲಿ ಮಾಡಿರುವ ಸರ್ಕಾರದ ಸಾಧನೆಗಳು ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂಬ ಅಚಲ ವಿಶ್ವಾಸವಿದೆ.
7
+ ಪಂಚ ಗ್ಯಾರಂಟಿಗಳಿಂದ ಮತದಾರರು ಸಂತೃಪ್ತರಾಗಿದ್ದು, ನಮ್ಮನ್ನು ಕೈ ಹಿಡಿಯಲಿದ್ದಾರೆ ಎಂಬ ಅಧಮ್ಯ ವಿಶ್ವಾಸ ಕೈಪಡೆಯಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜನಪ್ರಿಯತೆಯನ್ನು ಮತದಾರ ಓರೆಗೆ ಹಚ್ಚಲಿದ್ದಾನೆ.
8
+ ಬಿಜೆಪಿ ಸಾರಥ್ಯ ವಹಿಸಿರುವ ಬಿ.ವೈ.ವಿಜಯೇಂದ್ರರಿಗೂ ಪ್ರತಿಷ್ಠೆಯ ಕಣವಾಗಿದ್ದು, ಮೊದಲ ಹಂತದಲ್ಲೇ ಹೆಚ್ಚಿನ ಸ್ಥಾನ ಗೆಲ್ಲಲು ಶಕ್ತಿ ಮೀರಿ ಪ್ರಯತ್ನ ನಡೆಸಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು-ಕೊಡುಗಿನಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಭಾರೀ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮತ್ತು ಹೆಸರಾಂತ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ನಡುವೆ ಹಣಾಹಣಿ ಇದೆ.
9
+ ಉಳಿದಂತೆ ಸ್ಪರ್ಧಾ ಕಣದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಮುದ್ದಹನುಮೇಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಯಧುವೀರ ಕೃಷ್ಣದತ್ತ ಪಡೆಯರ್ ಸೇರಿದಂತೆ ಹಲವರು ಕಣದಲ್ಲಿದ್ದಾರೆ.ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 5,42,54,500 ಮತದಾರರು ಇದ್ದಾರೆ. ಈ ಪೈಕಿ 2,71,21,407 ಪುರುಷರು, 2,70,81,748 ಮಹಿಳೆಯರು, 4,933 ತೃತೀಯ ಲಿಂಗಿಗಳಿದ್ದಾರೆ.
10
+ 18ರಿಂದ 19 ವರ್ಷದ ವಯೋಮಾನದ ಯುವ ಮತದಾರರ ಸಂಖ್ಯೆ 11,24,622 ಹಾಗೂ 5,70,168 85 ವರ್ಷ ಮೇಲ್ಪಟ್ಟ ಹಿರಿಯರಿದ್ದಾರೆ. 58,834 ಒಟ್ಟು ಮತಗಟ್ಟೆಗಳು, 12,000 ಚುನವಣಾ ಸಿಬ್ಬಂದಿ ನಿಯೋಜಿಸಲಾಗುತ್ತದೆ.ಉಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಏ.12ರಂದು ಅಸೂಚನೆ ಹೊರಡಿಸಲಾಗುತ್ತದೆ.
11
+ ಮತದಾನ ನಡೆಯುವ ಕ್ಷೇತ್ರಗಳು:ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ( ಎಸ್ಸಿ ಮೀಸಲು ಕ್ಷೇತ್ರ), ತುಮಕೂರು, ಮಂಡ್ಯ, ಮೈಸೂರು-ಕೊಡುಗುಚಾಮರಾಜನಗರ ( ಎಸ್ಸಿ ಮೀಸಲು ಕ್ಷೇತ್ರ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ,ಚಿಕ್ಕಬಳ್ಳಾಪುರ, ಕೋಲಾರ ( ಎಸ್ಸಿ ಮೀಸಲು ಕ್ಷೇತ್ರ)
12
+ ಚುನಾವಣಾ ಪ್ರಕ್ರಿಯೆಅಧಿಸೂಚನೆ ಮಾ.28( ಗುರುವಾರ)ನಾಮಪತ್ರ ಸಲ್ಲಿಕೆ ಪ್ರಾರಂಭ- ಮಾ.28ರಿಂದ ಏ.4 ಕೊನೆಯ ದಿನನಾಮಪತ್ರ ಪರಿಶೀಲನೆ- ಏ.5ಏ.8- ನಾಮಪತ್ರ ಹಿಂಪಡೆಯಲು ಕೊನೆಯ ದಿನಮತದಾನ -ಏ.26
eesanje/url_46_194_7.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
2
+ ಬೆಂಗಳೂರು, ಮಾ.27-ಲೋಕಸಭೆ ಚುನಾವಣೆ ಕಾವಿನ ನಡುವೆಯೇ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಚರ-ಸ್ಥಿರ ಅಕ್ರಮ ಸಂಪತ್ತನ್ನು ಪತ್ತೆಹಚ್ಚಿದ್ದಾರೆ.
3
+ ರಾಜಧಾನಿ ಬೆಂಗಳೂರು, ಉಡುಪಿ, ಮೈಸೂರು, ಕೊಡಗು, ಕಾರವಾರ, ಬೀದರ್, ಧಾರವಾಡ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
4
+ ಸಾರ್ವಜನಿಕ ವಲಯದಿಂದ ಬಂದ ದೂರುಗಳನ್ನಾಧರಿಸಿ ಪರಿಶೀಲನೆ ನಡೆಸಿದ ನಂತರ 13 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ತಾಣಗಳಲ್ಲೂ ಕೂಡ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ರಾಜ್ಯದ ಅತಿ ದೊಡ್ಡ ಶ್ರೀಮಂತ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆದಿರುವ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಂತಿರುವ ಬಿಡದಿಯ ಮಂಚನಾಯಕನಹಳ್ಳಿ ಗ್ರಾಪಂ ಪಿಡಿಒ ಯತೀಶ್‍ಚಂದ್ರ ಅವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಅವರು ಇರಲಿಲ್ಲ. ನಂತರ ಮಾಹಿತಿ ಪಡೆದು ಈಗಲ್‍ಟನ್ ರೆಸಾರ್ಟ್‍ನಲ್ಲಿದ್ದ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
5
+ ಇವರು ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಪಂ ಕಚೇರಿ, ಮೈಸೂರು ಸೇರಿದಂತೆ ಏಳಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ಈ ವೇಳೆ ಮೈಸೂರಿನಲ್ಲಿ ಪತ್ನಿಯ ಹೆಸರಿನಲ್ಲಿರುವ ಐಷಾರಾಮಿ ಕಟ್ಟಡಗಳು, ವಿವಿಧೆಡೆ ನಿವೇಶನಗಳು ಹಾಗೂ ಹಣ ಹೂಡಿಕೆ ಬಗ್ಗೆ ದಾಖಲೆಗಳು ಪತ್ತೆಯಾಗಿವೆ.
6
+ ಇದೇ ವೇಳೆ ನೆರೆಯ ಚನ್ನಪಟ್ಟಣ ತಾಲೂಕಿನ ಮೈಲನಾಯಕನಹಳ್ಳಿ ಗ್ರಾಪಂ ಪಿಡಿಒ ಶೀಬಾ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ವಿಶೇಷವೆಂದರೆ ಇವರು ಕಳೆದ ಒಂದು ತಿಂಗಳ ಹಿಂದೆ ಎರಡು ತಿಂಗಳು ರಜೆ ಹಾಕಿ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ. ಇವರ ನಿವಾಸದಲ್ಲಿ ನಗದು, ಕೆಲ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
7
+ ಇನ್ನು ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಎಂಜಿನಿಯರ್ ರಂಗನಾಥ್ ಅವರ ಬೆಂಗಳೂರಿನ ನಿವಾಸ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್‍ಪಿ ನೇತೃತ್ವದಲ್ಲಿ ಸುಮಾರು 30ಕ್ಕೂ ಹೆಚ್ಚು ಸಿಬ್ಬಂದಿ ಐದು ಕಡೆ ದಾಳಿ ನಡೆಸಿ ಹಲವು ದಾಖಲೆಗಳು, ನಗದು ಹಾಗೂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
8
+ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ್ ಆರ್.ರೇವಣಕರ್ ಅವರ ಕಚೇರಿ ಹಾಗೂ ಐಶ್ವರ್ಯ ರೆಸಿಡೆನ್ಷಿಯಲ್ ಲೇಔಟ್‍ನಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ. ಈ ವೇಳೆ ಲೋಕಾಯುಕ್ತ ಅಕಾರಿಗಳನ್ನು ಕಂಡು ಮನೆಯವರು ಶಾಕ್ ಆಗಿದ್ದಾರೆ. ತಪಾ���ಣೆ ವೇಳೆ ಹಲವು ಆಸ್ತಿಗಳ ದಾಖಲಾತಿಗಳು ಸಿಕ್ಕಿದ್ದು, ಚಿನ್ನಾಭರಣ ಸೇರಿದಂತೆ ಹಲವು ವಸ್ತುಗಳ ಮೌಲ್ಯವನ್ನು ಪರಿಶೀಲಿಸಲಾಗುತ್ತಿದೆ.
9
+ ಬೀದರ್ ಜಿಲ್ಲೆಯ ಬಾಲ್ಕಿ ಕಾರಂಜ ವಿಭಾಗದ ಎಲೆಕ್ಟ್ರಿಕಲ್ ಎಂಜಿನಿಯರ್ ಶಿವಕುಮಾರ ಸ್ವಾಮಿ ಅವರ ಅಗ್ರಿಕಲ್ಚರ್ ಕಾಲೋನಿಯಲ್ಲಿರುವ ಮನೆ, ಕಲಬುರಗಿಯ ಎಂಬಿ ಕಾಲೋನಿಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಚಿಕ್ಕಬಳ್ಳಾಪುರದ ಕೆಆರ್‍ಡಿಎಲ್‍ನ ಅಧಿಕಾರಿ ಸದಾಶಿವಯ್ಯ ಅವರ ಯಲಹಂಕದಲ್ಲಿರುವ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಇವರಿಗೆ ಮೈಸೂರಿನಲ್ಲಿ ಎರಡು ಮನೆ, ಟಿ.ನರಸೀಪುರದಲ್ಲಿ ಮನೆ ಇರುವುದು ಪರಿಶೀಲನೆ ವೇಳೆ ತಿಳಿದುಬಂದಿದ್ದು, ಇನ್ನೂ ಹಲವೆಡೆ ಕೃಷಿ ಜಮೀನು ಹಾಗೂ ನಿವೇಶಗಳನ್ನು ಹೊಂದಿರುವ ಬಗ್ಗೆ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
10
+ ವಿಜಯಪುರದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಗಪ್ಪ ತೀರ್ಥ ಅವರಿಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ. ವಿಜಯಪುರದ ಚಾಲುಕ್ಯ ನಗರದಲ್ಲಿರುವ ನಿವಾಸ, ಜಮಖಂಡಿಯಲ್ಲಿರುವ ಮತ್ತೊಂದು ಮನೆ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ.
11
+ ಇಲ್ಲಿ ಅಪಾರ ಪ್ರಮಾಣದ ಚರ-ಸ್ಥಿರ ಆಸ್ತಿಗಳ ದಾಖಲೆಗಳು ಪತ್ತೆಯಾಗಿದ್ದು, ಅವರ ಸಂಪತ್ತು ನೋಡಿ ಲೋಕಾಯುಕ್ತರೇ ಬೆರಗಾಗಿದ್ದಾರೆ. ಧಾರವಾಡದ ಅರಣ್ಯ ಸಂಶೋಧನಾ ವಿಭಾಗದ ಆರ್‍ಎಫ್‍ಒ ಮಹೇಶ್ ಹಿರೇಮಠ ಅವರ ಮೂಕಾಂಬಿಕ ನಗರದಲ್ಲಿರುವ ಮನೆ ಹಾಗೂ ಕಚೇರಿಗಳ ಮೇಲೆ ಧಾರವಾಡ ಎಸ್‍ಪಿ ಶಂಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
12
+ ಹಲವೆಡೆ ಕೃಷಿ ಜಮೀನು ಹಾಗೂ ಹಲವು ಬ್ಯಾಂಕ್‍ಗಳಲ್ಲಿ ಹೂಡಿಕೆ ಮಾಡಿರುವುದು ಪತ್ತೆಯಾಗಿದ್ದು, ಪರಿಶೀಲನೆ ಮುಂದುವರೆದಿದೆ. ಒಟ್ಟಾರೆ ಲೋಕಾಯುಕ್ತ ಅಧಿಕಾರಿಗಳು ಬೇಸಿಗೆಯ ಬಿಸಿ ನಡುವೆಯೇ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
eesanje/url_46_194_8.txt ADDED
@@ -0,0 +1,7 @@
 
 
 
 
 
 
 
 
1
+ ಬಿರುಬಿಸಿಲಿಗೆ ದುಬಾರಿಯಾಯ್ತು ಸೌತೆ, ನಿಂಬೆ, ಎಳನೀರು
2
+ ಬೆಂಗಳೂರು, ಮಾ.26-ದಿನದಿಂದ ದಿನಕ್ಕೆ ತಾಪಾಮಾನ ಏರಿಕೆಯಾಗುತ್ತಿದ್ದು, ಸುಡು ಬಿಸಿಲಿನಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳಲು ಜನರು ಎಳನೀರು, ತಂಪುಪಾನೀಯ, ಕಲ್ಲಂಗಡಿ ಹಾಗೂ ಸೌತೆಕಾಯಿ ಮೊರೆಹೊಗುತ್ತಿದ್ದಾರೆ.ಬಿಸಿಲು ಏರುತ್ತಿದ್ದಂತೆ ಇವರುಗಳ ಬೆಲೆಯೂ ಸಹ ಏರುತ್ತಿದ್ದು ಗ್ರಾಹಕರನ್ನು ಸುಡುತ್ತಿದೆ. ರಾಜ್ಯಾದ್ಯಂತ ಬರಗಾಲ ಆವರಿಸಿದ್ದು, ಮಳೆ ಬಾರದೆ ರಾಜಧಾನಿ ಸೇರಿದಂತೆ ವಿವಿಧೆಡೆ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದರಾಗಿದೆ. ಈ ಬಿಸಿಲಿನಲ್ಲಿ ದೇಹಕ್ಕೆ ಅಷ್ಟೇನೂ ಆಹಾರ ಸೇರುವುದಿಲ್ಲ. ನೀರು ಕುಡಿದು ಕುಡಿದು ಹೊಟ್ಟೆ ತುಂಬುತ್ತದೆ ಅಷ್ಟೆ.
3
+ ಈ ಸಮಯದಲ್ಲಿ ಯಾವ ಹಣ್ಣು ತರಕಾರಿ, ಪಾನೀಯ ಸೇವಿಸಬೇಕೆಂಬುದೇ ಒಂದು ಸಮಸ್ಯೆಯಾಗಿದ್ದು, ಇರುವುದರಲ್ಲಿ ನೈಸರ್ಗಿಕ ಪಾನೀಯವನ್ನು ಜನರು ಆಯ್ಕೆ ಮಾಡಿಕೊಳ್ಳುತ್ತಾರೆ. ಇದರಲ್ಲಿ ಎಳನೀರು ಮೊದಲ ಸ್ಥಾನದಲ್ಲಿದೆ. ಇದು ದಾಹನ ನೀಗಿಸುವುದರ ಜೊತೆಗೆ ದೇಹಕ್ಕೆ ಹಲವಾರು ಪೌಶಕಾಂಶಗಳನ್ನು ನೀಡುತ್ತದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಎಳನೀರು ಮಾರಾಟ ಜೋರಾಗಿದೆ. ಆದರೆ ಬೆಲೆ ಮಾತ್ರ ಬಲು ದುಬಾರಿಯಾಗಿದೆ.
4
+ ಗುಣಮಟ್ಟ ಹಾಗೂ ಫ್ರೆಶ್ ಆಗಿರುವ ಒಂದು ಎಳನೀರಿಗೆ 35ರಿಂದ 40 ರೂ. ಮಾರಾಟವಾಗುತ್ತದೆ. ಬೆಂಗಳೂರಿಗೆ ಹೆಚ್ಚಾಗಿ ಮದ್ದೂರು, ಮಂಡ್ಯ ಭಾಗದಿಂದ ಎಳನೀರು ಬರುತ್ತಿದ್ದು, ಸಾಗಾಣಿಕೆ ವೆಚ್ಚ, ಕೂಲಿ ಎಲ್ಲವೂ ಸೇರಿ 40 ರೂ. ಗೆ ಮಾರಾಟ ಮಾಡಲಾಗುತ್ತಿದೆ. ಇದು ಹೊರೆಯಾದರೂ ಆರೋಗ್ಯದ ದೃಷ್ಟಿಯಿಂದ ಜನರು ಕುಡಿಯುತ್ತಿದ್ದಾರೆ.
5
+ ಬೇಸಿಗೆಯಲ್ಲಿ ಬಸವಳಿದು ಮನೆಗೆ ಬಂದರೆ ಕೂಡಲೇ ಎನರ್ಜಿ ಡ್ರಿಂಕ್ ಆಗಿ ನಿಂಬೆ ಜ್ಯೂಸ್ ಅನ್ನು ಹೆಚ್ಚು ಜನ ಸೇವಿಸುತ್ತಾರೆ. ಆದರೆ ಈ ಸಮಯದಲ್ಲಿ ನಿಂಬೆಹಣ್ಣಿನ ಬೆಲೆ ಮಾತ್ರ ದುಬಾರಿಯಾಗುತ್ತಿದೆ. ಸಾಮಾನ್ಯ ದಿನಗಳಲ್ಲಿ ಒಂದಕ್ಕೆ ಹೆಚ್ಚು ಅಂದರೂ 5 ರೂ. ಇರುತ್ತದೆ. ಆದರೆ ಇಗ ಇದರ ಬೆಲೆ ಒಂದಕ್ಕೆ 10 ರೂ. ಮುಟ್ಟಿದೆ ನೀರಿಲ್ಲದೆ ಗಿಡಗಳು ಒಣಗುತ್ತಿದ್ದು, ತಾಪಕ್ಕೆ ಹೂ, ಪೀಚುಗಳು ಉದುರುತ್ತಿದ್ದು, ಇಳುವರಿ ಕುಂಠಿತವಾಗಿದೆ. ಮಾರುಕಟ್ಟೆಗೆ ಅಗತ್ಯ ಪ್ರಮಾಣದಲ್ಲಿ ಹಣ್ಣು ಬಾರದಿರುವುದರಿಂದ ಬೆಲೆ ಏರಿಕೆಯಾಗಿದೆ. ಇನ್ನು ಯುಗಾದಿ ಹಬ್ಬಕ್ಕೆ ಒಂದು ನಿಂಬೆಹಣ್ಣಿನ ಬೆಲೆ 20ರೂ. ಆದರೂ ಅಚ್ಚರಿ ಪಡುವಂತಿಲ್ಲ.
6
+ ನೀರಿನ ಅಂಶ ಹೆಚ್ಚಾಗಿರುವ ಸೌತೆಕಾಯಿ ಬೆಲೆಯಲ್ಲೂ ಸಹ ಹೆಚ್ಚಳವಾಗಿದೆ. ದಾಹ ನೀಗಿಸುವುದರ ಜೊತೆಗೆ ಹಲವಾರು ಔಷಯ ಗುಣಗಳನ್ನು ಹೊಂದಿರುವ ಸೌತೆಗೆ ಡಿಮ್ಯಾಂಡ್ ಹೆಚ್ಚಾಗಿದ್ದು, ಮಾರುಕಟ್ಟೆಯಲ್ಲಿ ಕೆಜಿಗೆ 35ರಿಂದ 40 ರೂ.ಗೆ ಮಾರಾಟ ಮಾಡಲಾಗುತ್ತಿದೆ.
7
+ ಈ ಬೆಳೆಗೆ ಹೆಚ್ಚು ನೀರಿನ ಅವಶ್ಯಕತೆ ಇದ್ದು, ಬೋರ್ವೆಲ್ಗಳಲ್ಲಿ ಅಂತರ್ಜಲ ಮಾಯವಾಗಿರುವದರಿಂದ ರೈತರು ಬೆಳೆಯಲು ಮುಂದಾಗಿಲ್ಲ. ಜೊತೆಗೆ ಬಿಸಿಲು ಹೆಚ್ಚಾಗಿರುವುದರಿಂದ ಬೇಗ ಬೆಂಡಾಗುತ್ತವೆ.ಈ ಹಿನ್ನೆಲೆಯಲ್ಲಿ ಇಳುವರಿ ಇಳಿಮುಖ ವಾಗಿದ್ದು, ಬೆಲೆ ಹೆಚ್ಚಳವಾಗಿದೆ. ಯುಗಾದಿ ಹೊಸತಡಕಿಗೆ ಹೆಚ್ಚಾಗಿ ಸೌತೆಕಾಯಿ, ಲಿಂಬೆಹಣ್ಣನ್ನು ಬಳಸುವುದರಿಂದ ಇವುಗಳ ಬೆಲೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಒಂದು ಕಡೆ ಬಿಸಿಲು ನೆತ್ತಿಸುಡುತ್ತಿದ್ದರೆ ಮತ್ತೊಂದೆಡೆ ದಾಹನೀಗಿಸುವ ಎಳನೀರು, ಸೌತೆಕಾಯಿ ಹಾಗೂ ಲಿಂಬೆಹಣ್ಣಿನ ಬೆಲೆ ಗ್ರಾಹಕರ ಜೇಬನ್ನು ಸುಡುತ್ತಿದೆ.
eesanje/url_46_194_9.txt ADDED
@@ -0,0 +1,6 @@
 
 
 
 
 
 
 
1
+ ಮಾಜಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಸೂಚನೆ
2
+ ಬೆಂಗಳೂರು,ಮಾ.26-ವಿಧಾನಸಭೆಯ ಮಾಜಿ ಉಪ ಸಭಾಪತಿ ಹಾಗೂ ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಕೃಷ್ಣಾರೆಡ್ಡಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯದ ಆದೇಶ ನೀಡಿದೆ.
3
+ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕಲಂ 499ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಡಿಷನಲ್ ಚೀಫ್ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಜೆ. ಪ್ರೀತ್ ಅವರು ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.
4
+ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗಣೇಶ ಮಂದಿರ ವಾರ್ಡ್ ವ್ಯಾಪ್ತಿಯ ಬನಗಿರಿ ನಗರಕ್ಕೆ ಸೇರಿರುವ ಕತ್ರಿಗುಪ್ಪೆ ಸರ್ವೇ ನಂ. 125 ಮತ್ತು 126 ಕ್ಕೆ ಸೇರಿರುವ ಸುಮಾರು 350 ಕೋಟಿ ಮೌಲ್ಯದ 4.31 ಎಕರೆ ವಿಸ್ತೀರ್ಣದ ಸರ್ಕಾರಿ ಸ್ವತ್ತಿಗೆ 41 ಮಂದಿ ಸರ್ಕಾರಿ ನೆಲಗಳ್ಳರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸುವ ಯತ್ನ ನಡೆಸಿದ್ದರು.
5
+ ಈ ಸಂಬಂಧ ಲೋಕಾಯುಕ್ತ ಮತ್ತು ಬಿಎಂಟಿಎಫ್ನಲ್ಲಿ ದೂರುಗಳನ್ನು ಸಲ್ಲಿಸಲಾಗಿತ್ತು ಹಾಗೂ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸದನ ಸಮಿತಿಯ ಅಧ್ಯಕ್ಷರೂ ಆಗಿದ್ದ ಕೃಷ್ಣಾ ರೆಡ್ಡಿ ಅವರು ಆರೋಪಿಗಳ ವಿರುದ್ಧ ಕ್ರಮಕ್ಕೆ ಆದೇಶಿಸುವ ಬದಲಾಗಿ, ಪಾಲಿಕೆಯ ಸ್ವತ್ತನ್ನು ಪಾಲಿಕೆಯ ವಶಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದ ಅಧಿಕಾರಿಯ ವಿರುದ್ಧವೇ ನಿರ್ಣಯ ತೆಗೆದುಕೊಂಡಿದ್ದರು.
6
+ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿ ಲೋಕಾಯುಕ್ತ ಮತ್ತು ಬಿಎಂಟಿಎಫ್ತನಿಖಾ ಸಂಸ್ಥೆಗಳಲ್ಲಿ ರಮೇಶ್ ಅವರು ದೂರುಗಳನ್ನು ದಾಖಲಿಸಿದ್ದರು. ಈ ಸಂಬಂಧ ಅವರ ಬಗ್ಗೆ ಕೃಷ್ಣಾ ರೆಡ್ಡಿಯವರು ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ರಮೇಶ್ ಅವರು ಕೃಷ್ಣಾ ರೆಡ್ಡಿಯವರ ವಿರುದ್ಧ ಖಾಸಗಿ ದೂರನ್ನು ದಾಖಲಿಸಿದ್ದರು. ನ್ಯಾಯಾಲಯದ ಆದೇಶದಂತೆ ಕೃಷ್ಣಾ ರೆಡ್ಡಿಯವರು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿ ಜಾಮೀನು ಪಡೆದುಕೊಳ್ಳಬೇಕಿದೆ.
eesanje/url_46_195_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಹಳೇ ಮೈಸೂರು ಭಾಗದಲ್ಲಿ ‘ಆಪರೇಷನ್ ಹಸ್ತ’ ಜೋರು
2
+ ಬೆಂಗಳೂರು,ಮಾ.26– ಮೈಸೂರು- ಚಾಮರಾಜನಗರ, ಮಂಡ್ಯ ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಮೂರು ದಿನಗಳಿಂದಲೂ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬೀಡುಬಿಟ್ಟು ಕಾರ್ಯತಂತ್ರ ರೂಪಿ ಸುವಲ್ಲಿ ನಿರತರಾಗಿದ್ದಾರೆ.
3
+ ಇಂದು ಮೈಸೂರಿನಲ್ಲಿ ನಡೆಯುವ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತರಾಗಿರುವ ಎಚ್.ವಿ.ರಾಜೀವ, ಮೈಸೂರಿನ ಮಾಜಿ ಮಹಾಪೌರರಾಗಿದ್ದ ಬಿ.ಎಲ್.ಭೈರಪ್ಪ, ಹಿರಿಯ ಮುಖಂಡ ಕೆ.ವಿ.ಮಲ್ಲೇಶ್ ಸೇರಿದಂತೆ ನೂರಾರು ಮಂದಿ ಇಂದು ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
4
+ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಅಸಮಾಧಾನಗೊಂಡಿರುವ ಹಾಗೂ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಯಡಿಯೂರಪ್ಪ ಅವರ ಮಾತನ್ನು ನಿರ್ಲಕ್ಷಿಸಿದ್ದರಿಂದಾಗಿ ಅಸಹನೆಗೊಳಗಾಗಿರುವ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತೃಪ್ತ ನಾಯಕರನ್ನು ಕಾಂಗ್ರೆಸ್ಗೆ ಸೆಳೆದುಕೊಳ್ಳಲಾಗುತ್ತಿದೆ. ಇತ್ತೀಚೆಗೆ ಮಾಜಿ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಹಾಗೂ ಅಪ್ಪಾಜಿಗೌಡ, ಮಾಜಿ ಶಾಸಕ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರ್ಪಡೆಯಾದರು.
5
+ ಅದರ ಬೆನ್ನಲ್ಲೇ ಮೈಸೂರಿನಲ್ಲಿ ಬಿಜೆಪಿಯ ಪ್ರಬಾವಿ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅವರಿಗೆ ಟಿಕೆಟ್ ವಂಚನೆಯಾಗುತ್ತಿದ್ದಂತೆ ಅವರ ಬೆಂಬಲಿಗರು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.ಬಿಜೆಪಿ ಚುನಾವಣೆ ಹಿನ್ನೆಲೆಯಲ್ಲಿ ಕರೆದಿರುವ ಮಂಡ್ಯ ಜಿಲ್ಲೆಯ ಸಭೆಗೆ ಸಂಸದೆ ಸುಮಲತಾ ಅವರಿಗೆ ಆಹ್ವಾನ ಇಲ್ಲ ಎಂಬುದು ಜಿಲ್ಲೆಯ ಬಹಳಷ್ಟು ಮಂದಿ ಬೆಂಬಲಿಗರನ್ನು ಕೆರಳಿಸಿದೆ.
6
+ ಹೀಗಾಗಿ ಕಾಂಗ್ರೆಸ್ನತ್ತ ವಲಸೆ ಬರುವವರ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಮೈಸೂರು ಲೋಕಸಭಾ ಕ್ಷೇತ್ರದ ಲಕ್ಷ್ಮಣ್ ಅವರನ್ನು ಗೆಲ್ಲಿಸಿಕೊಳ್ಳಲೇ ಬೇಕೆಂದು ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಡರಾತ್ರಿ 2 ಗಂಟೆಯವರೆಗೂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸಿ ಚುನಾವಣಾ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
7
+ ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ್ ಒಡೆಯರ್ ಅವರ ವಿರುದ್ಧ ಯಾವುದೇ ಟೀಕೆ ಮಾಡಬಾರದು. ಕಾಂಗ್ರೆಸ್ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮತದಾರರ ಮನವೊಲಿಸಬೇಕು. ಬಿಜೆಪಿ ರಾಜ್ಯ ಮತ್ತು ಜಿಲ್ಲೆಗಳಿಗೆ ಮಾಡಿರುವ ಅನ್ಯಾಯಗಳ ಬಗ್ಗೆ ಮನೆಮನೆಗೆ ಮಾಹಿತಿ ನೀಡಿ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟು ಪ್ರದರ್ಶಿಸಬೇಕು. ಯಾವುದೇ ಕಾರಣಕ್ಕೂ ಅಸಮಾಧಾನ, ಅತೃಪ್ತಿಗಳಿಗೆ ಅವಕಾಶ ನೀಡಬಾರದು ಎಂದು ಕಿವಿಮಾತು ಹೇಳಿದ್ದಾರೆ.
8
+ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲದೇ ಇದ್ದರೆ ಜಿಲ್ಲೆಯ ಯಾವುದೇ ನಾಯಕರು ನನ್ನ ಹತ್ತಿರ ಅರ್ಜಿ ಹಿಡಿದು ಬರಬೇಡಿ. ನಿಮ್ಮ ಯಾವುದೇ ಕೆಲಸಗಳನ್ನು ಮಾಡಿಕೊಡುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.ಮೈಸೂರು ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ಅಸಮಾಧಾನಿತ ನಾಯಕರ ಪೈಕಿ ಜನಬೆಂಬಲ ಇರುವ ಹಾಗೂ ಸೈದ್ಧಾಂತಿಕ ಸ್ಪಷ್ಟತೆ ಇರುವವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ. ಹೀಗೆ ಬಂದು ಹಾಗೆ ಹೋಗುವವರನ್ನು ಸೇರಿಸಿಕೊಳ್ಳಬೇಡಿ. ಸೈದ್ಧಾಂತಿಕವಾಗಿ ಬಿಜೆಪಿಯನ್ನು ಅನುಸರಿಸುವುದು, ರಾಜಕೀಯ ಅವಕಾಶಕ್ಕಾಗಿ ಕಾಂಗ್ರೆಸ್ಗೆ ಬರುವವರ ಮೇಲೆ ನಿಗಾ ಇಡಿ ಎಂದು ತಾಕೀತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
9
+ ಚುನಾವಣೆ ಅಧಿಸೂಚನೆ ಜಾರಿಗೆ ಎರಡು ದಿನ ಬಾಕಿ ಇದ್ದು ರಾಜ್ಯಾದ್ಯಂತ ಲೋಕಸಭಾ ಚುನಾವಣೆಯ ಕಾವು ನಿಧಾನಕ್ಕೆ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜ್ಯಾದ್ಯಂತ ಪ್ರಚಾರ ನಡೆಸುವ ಅನಿವಾರ್ಯತೆ ಇದೆ. ಅದಕ್ಕೆ ಪೂರ್ವಭಾವಿಯಾಗಿ ತಮ್ಮ ತವರು ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ನೀಡಬೇಕಾಗಿದ್ದ ಸಲಹೆ ಸೂಚನೆ ನೀಡಲು ಮೂರು ದಿನಗಳ ಕಾಲ ನಿರಂತರ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
eesanje/url_46_195_10.txt ADDED
@@ -0,0 +1,6 @@
 
 
 
 
 
 
 
1
+ ಹಲವು ವಿಶೇಷಗಳ ಜೊತೆ ಪರೀಕ್ಷೆ ಆರಂಭ
2
+ ಬೆಂಗಳೂರು,ಮಾ.25-ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಸಲಾಗಿರುವ ಎಸ್ಸೆಸ್ಸೆಲ್ಸಿ ಮೊದಲ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ರಾಜ್ಯಾದ್ಯಂತ 2700ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಸುಲಲಿತವಾಗಿ ನಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಕಲು ತಡೆಗಟ್ಟಲು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.
3
+ ಇಂದು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪ್ರಥಮ ಭಾಷೆಯ ಕನ್ನಡ, ತಮಿಳು, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್ , ಸಂಸ್ಕøತ ವಿಷಯಗಳ ಪರೀಕ್ಷೆಗಳು ನಡೆದವು.ಸರ್ಕಾರಿ, ಅನುದಾನ, ಅನುದಾನರಹಿತ ಹಾಗೂ ಖಾಸಗಿ ಶಾಲೆಗಳು ಸೇರಿದಂತೆ 4,41,910 ಬಾಲಕರು, 4,28,058 ಬಾಲಕಿಯರು ಸೇರಿದಂತೆ 8,69,968 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 2,750 ಪರೀಕ್ಷಾ ಕೇಂದ್ರಗಳನ್ನು ಮಂಡಳಿ ತೆರೆದಿದೆ.
4
+ ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ ವರ್ಗದವರು, ಸಿಬ್ಬಂದಿಗಳು ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡಲಾಗಿದೆ. ಅಲ್ಲದೆ ಪರೀಕ್ಷೆ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
5
+ ಪರೀಕ್ಷೆಯಲ್ಲಿ ನಕಲು ತಡೆಗಟ್ಟಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಉತ್ಸಾಹ ಕಂಡುಬಂದಿದೆ. ಪೊಷಕರಲ್ಲಿ ಮಕ್ಕಳ ಭವಿಷ್ಯದ ಕಾಳಜಿ, ದುಗುಡಗಳು ಪರೀಕ್ಷಾ ಕೇಂದ್ರದ ಬಳಿ ಕಂಡುಬಂದವು.
6
+ ವಿದ್ಯಾರ್ಥಿಗಳು ನಿಗದಿತ ಅವಗಿಂತಲೂ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದರು. ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಸಗರ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ತಾಯಿ ಗಂಗಮ್ಮ, ಆಕೆಯ ಪುತ್ರ ಮಲ್ಲಿಕಾರ್ಜುನ್ ಒಟ್ಟಿಗೆ ಪರೀಕ್ಷೆ ಬರೆದಿದ್ದು ಗಮನಸೆಳೆದಿತ್ತು. ಅಲ್ಲಲ್ಲಿ ಸಣ್ಣಪುಟ್ಟ ಗೊಂದಲಗಳ ಹೊರತಾಗಿಯೂ ರಾಜ್ಯಾದ್ಯಂತ ಸುಗಮವಾದ ಪರೀಕ್ಷೆ ನಡೆದಿದ್ದು, ಏಪ್ರಿಲ್ 6ರಂದು ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ವಿಷಯಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯಗೊಳ್ಳಲಿದೆ.
eesanje/url_46_195_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ನಾಳೆ ಪ್ರಕಟ ಸಾಧ್ಯತೆ
2
+ ಬೆಂಗಳೂರು,ಮಾ.25-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡಿರುವ ಜೆಡಿಎಸ್ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ನಾಳೆ ಅಧಿಕೃತವಾಗಿ ಪ್ರಕಟಿಸಲಿದೆ.
3
+ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಜೆಡಿಎಸ್ ಕೋರ್ಕಮಿಟಿ ಸಭೆ ನಾಳೆ ಮಧ್ಯಾಹ್ನ ನಡೆಯಲಿದ್ದು, ಆನಂತರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಮಂಡ್ಯ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂಬುದು ಇಂದು ಸಂಜೆ ವೇಳೆಗೆ ನಿರ್ಧಾರವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
4
+ ಹಾಸನ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ , ಕೋಲಾರ ಮೀಸಲು ಕ್ಷೇತ್ರದಿಂದ ಮಲ್ಲೇಶ್ ಬಾಬು ಅಭ್ಯರ್ಥಿಗಳಾಗಲಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ರ್ಪಧಿಸುವುದು ಬಹುತೇಕ ಖಚಿತವಾಗಿದೆ.
5
+ ಆದರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕ್ಷೇತ್ರ ಬಿಟ್ಟು ಹೋಗದಂತೆ ಕುಮಾರಸ್ವಾಮಿಯವರನ್ನು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ.
6
+ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಜೆಪಿ ನಗರದ ಮನೆಗೆ ಆಗಮಿಸಿ ವಿಶ್ರಾಂತಿ ಪಡೆಯುತ್ತಿರುವ ಕುಮಾರಸ್ವಾಮಿ ಅವರನ್ನು ನಿನ್ನೆ ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಭೇಟಿಯಾಗಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.
7
+ ಆ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡಿ, ಕಾರ್ಯಕರ್ತರ ಒತ್ತಾಸೆಗೆ ನಿರಾಸೆ ಮಾಡುವುದಿಲ್ಲ. ಆದರೆ ಚನ್ನಪಟ್ಟಣ ಕ್ಷೇತ್ರದ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಇಂದು ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡರು ಎಚ್.ಸಿ.ಜಯಮುತ್ತು ನೇತೃತ್ವದಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಬಿಟ್ಟು ಹೋಗಬಾರದು.
8
+ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಎಂದು ಒತ್ತಾಯ ಮಾಡಿದ್ದಾರೆ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಈಗಾಗಲೇ ಕುಮಾರಸ್ವಾಮಿಯವರು ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಂದು ಪ್ರಕಟಿಸಿದ್ದಾರೆ. ಮಂಡ್ಯದಲ್ಲಿ ನಡೆದ ಸಭೆಯಲ್ಲೂ ಕೂಡ ಕುಮಾರಸ್ವಾಮಿಯವರು ನಿಮಗೆ ನಿರಾಶೆ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ ಅಭ್ಯರ್ಥಿ ಆಯ್ಕ��ಯನ್ನು ಇಂದು ಪ್ರಕಟಿಸುವುದಾಗಿ ಘೋಷಿಸಿದ್ದರು.
9
+ ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವಂತೆ ಪಕ್ಷದ ಮುಖಂಡರು ಹಲವು ಬಾರಿ ಒತ್ತಾಯ ಮಾಡಿದ್ದರು. ಆದರೂ ಸ್ಪರ್ಧೆ ಮಾಡುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಪದೇಪದೇ ಪುನರುಚ್ಚರಿಸಿದ್ದರು. ಒಂದು ವೇಳೆ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಸ್ರ್ಪಸುವುದರಿಂದ ಹಿಂದೆ ಸರಿದರೆ ನಿಖಿಲ್ ಕುಮಾರಸ್ವಾಮಿಯವರನ್ನು ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆಗಳಿವೆ.
eesanje/url_46_195_12.txt ADDED
@@ -0,0 +1,8 @@
 
 
 
 
 
 
 
 
 
1
+ ಬಿಜೆಪಿ ಜಾತಿವಾರು ಟಿಕೆಟ್ ಲೆಕ್ಕಾಚಾರ, ವೀರಶೈವ ಲಿಂಗಾಯತರಿಗೆ ಹೆಚ್ಚುಪಾಲು
2
+ ಬೆಂಗಳೂರು,ಮಾ.25-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೈಕೊಟ್ಟಿದ್ದ ಲಿಂಗಾಯಿತ ಮತಬ್ಯಾಂಕ್‍ನ್ನು ಭದ್ರ ಮಾಡಿಕೊಳ್ಳಲು ಬಿಜೆಪಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 9 ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿದೆ. 25 ಕ್ಷೇತ್ರಗಳ ಪೈಕಿ ಪ್ರಕಟಗೊಂಡಿರುವ 24 ಕ್ಷೇತ್ರಗಳ ಜಾತಿವಾರು ಪಟ್ಟಿಯನ್ನು ಅವಲೋಕಿಸಿದಾಗ ತನ್ನ ಸಾಂಪ್ರದಾಯಿಕ ಮತಬ್ಯಾಂಕ್ ಕೈಕೊಡದಂತೆ ಭದ್ರಪಡಿಸಿಕೊಳ್ಳಲು 9 ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತರಿಗೆ ಪ್ರಾಶಸ್ತ್ಯ ನೀಡಲಾಗಿದೆ. ಒಕ್ಕಲಿಗ ಸಮುದಾಯಕ್ಕೆ 3 ಕ್ಷೇತ್ರಗಳು, ಬ್ರಾಹ್ಮಣರಿಗೆ 3, ಪರಿಶಿಷ್ಟ ಜಾತಿಗೆ 3, ಪರಿಶಿಷ್ಟ ಪಂಗಡಕ್ಕೆ 2, ಹಿಂದುಳಿದ ವರ್ಗಕ್ಕೆ 3, ಅತಿ ಹಿಂದುಳಿದ ಮತ್ತು ಕ್ಷತ್ರೀಯ ಸಮುದಾಯಕ್ಕೆ ತಲಾ ಒಂದು ಕ್ಷೇತ್ರವನ್ನು ನೀಡಲಾಗಿದೆ.
3
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವೀರಶೈವ ಲಿಂಗಾಯಿತರು ಕೈಕೊಟ್ಟು ಕಾಂಗ್ರೆಸ್ ಬೆಂಬಲಿಸಿದ್ದು, ಫಲಿತಾಂಶದಿಂದಲೇ ಸಾಬೀತಾಗಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಬಿಜೆಪಿ ವರಿಷ್ಠರು ಲಿಂಗಾಯತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅದೇ ಸಮುದಾಯದ ಅಭ್ಯರ್ಥಿಗಳಿಗೆ ಮಣೆ ಹಾಕಿದ್ದಾರೆ.
4
+ ಚಿಕ್ಕೋಡಿಯಿಂದ ಅಣ್ಣಾಸಾಹೇಬ್ ಜೊಲ್ಲೆ, ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಬಾಗಲಕೋಟೆಯಿಂದ ಪಿ.ಸಿ.ಗದ್ದಿಗೌಡರು, ಬೀದರ್‍ನಿಂದ ಭಗವಂತ ಖೂಬಾ, ಕೊಪ್ಪಳ – ಬಸವರಾಜ ಕ್ಯಾವಟಗಿಗೆ ಟಿಕೆಟ್ ನೀಡಲಾಗಿದೆ. ಹಾವೇರಿಯಿಂದ ಬಸವರಾಜ ಬೊಮ್ಮಾಯಿ, ದಾವಣಗೆರೆಯಿಂದ ಗಾಯತ್ರಿ ಸಿದ್ದೇಶ್ವರ್, ಶಿವಮೊಗ್ಗದಿಂದ ಬಿ.ವೈ.ರಾಘವೇಂದ್ರ, ತುಮಕೂರಿನಿಂದ ವಿ.ಸೋಮಣ್ಣನವರಿಗೆ ಮಣೆ ಹಾಕಲಾಗಿದೆ.
5
+ ರಾಜ್ಯದಲ್ಲಿ ಎರಡನೇ ಅತಿದೊಡ್ಡ ಸಮುದಾಯ ಎಂದು ಹೇಳಲಾಗುತ್ತಿರುವ ಒಕ್ಕಲಿಗ ಸಮುದಾಯಕ್ಕೆ 3 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ನೀಡಿದೆ. ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ, ಚಿಕ್ಕಬಳ್ಲಾಪುರದಿಂದ ಡಾ.ಕೆ.ಸುಧಾಕರ್, ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಅವಕಾಶ ನೀಡಿದೆ. ಹಿಂದುಳಿದ ವರ್ಗ ಬಿಲ್ಲವ ಸಮಾಜಕ್ಕೆ ಮೂರು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದ್ದು, ಉಡುಪಿ- ಚಿಕ್ಕಮಗಳೂರಿನಿಂದ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ – ಬ್ರಿಜೇಶ್ ಚೌಟಲ ಸ್ಪರ್ಧಿಸಲಿದ್ದಾರೆ..
6
+ ಪರಿಶಿಷ್ಟ ಜಾತಿಯವರಿಗೆ 3 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ನೀಡಿದ್ದು, ವಿಜಯಪುರದಿಂದ ರಮೇಶ್ ಜಿಗಜಿಣಗಿ, ಚಾಮರಾಜನಗರದಿಂದ ಬಾಲರಾಜ್ ಅವರಿಗೆ ಸ್ರ್ಪಸಲು ಅವಕಾಶ ನೀಡಲಾಗಿದೆ. ಪರಿಶಿಷ್ಟ ಪಂಗಡದವರಿಗೆ 2 ಕ್ಷೇತ್ರಗಳಲ್ಲಿ ಪಕ್ಷ ಟಿಕೆಟ್ ನೀಡಿದ್ದು ರಾಯಚೂರಿನಿಂದ ರಾಜಾ ಅಮರೇಶ್ ನಾಯಕ್ ಹಾಗೂ ಬಳ್ಳಾರಿಯಿಂದ ಶ್ರೀರಾಮುಲು ಅವರು ಸ್ರ್ಪಸಲಿದ್ದಾರೆ.
7
+ ಇನ್ನು ಉಳಿದಂತೆ ಕಲಬುರಗಿಯಿಂದ ಡಾ.ಉಮೇಶ್ ಜಾಧವ್-ಬಂಜಾರ, ಮೈಸೂರು-ಕೊಡುಗು ಕ್ಷೇತ್ರದಿಂದ ಯದುವೀರ ಒಡೆಯರ್, ಕ್ಷತ್ರಿಯ ಸಮುದಾಯಕ್ಕೆ ಮಣೆ ಹಾಕಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿರುವುದರಿಂದ ಅದೇ ಸಮುದಾಯಕ್ಕೆ ಟಿಕೆಟ್ ನೀಡಲೇಕಿದೆ. .
8
+ ಜಾತಿ ಬಲಾಬಲ :ಲಿಂಗಾಯಿತ -9ಒಕ್ಕಲಿಗ -3ಬ್ರಾಹ್ಮಣ -3ಹಿಂದುಳಿದ ವರ್ಗ -3ಪರಿಶಿಷ್ಟ ಜಾತಿ -3ಪರಿಶಿಷ್ಟ ಪಂಗಡ -2ಬಂಜಾರ -1ಕ್ಷತ್ರಿಯ -1
eesanje/url_46_195_2.txt ADDED
@@ -0,0 +1,7 @@
 
 
 
 
 
 
 
 
1
+ ಮತದಾರರಿಗೆ ಆಮಿಷ : ಡಿ.ಕೆ.ಸುರೇಶ್ ವಿರುದ್ಧ ಕ್ರಮಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚನೆ
2
+ ನವದೆಹಲಿ, ಮಾ.26-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಮುಖ್ಯ ಚುನಾವಣಾಕಾರಿಗೆ ಸೂಚನೆ ನೀಡಿದೆ.
3
+ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಈ ಬಗ್ಗೆ ರಾಜ್ಯ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಯೋಗಕ್ಕೆ ಪತ್ರ ಬರೆದಿದ್ದರು.
4
+ ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಡಿ.ಕೆ.ಸುರೇಶ್ ಉಲ್ಲಂಘಿಸಿದ್ದರೆ ತತಕ್ಷಣವೇ ಅವರ ಮೇಲೆ ಸೂಕ್ತವಾದ ಕಾನೂನು ಕ್ರಮವನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಮುಖ್ಯ ಚುನಾವಣಾ ಆಯುಕ್ತರು ಸೂಚನೆ ಕೊಟ್ಟಿದ್ದಾರೆ.
5
+ ಕಳೆದ 21ರಂದು ಆಯೋಗಕ್ಕೆ ಪತ್ರ ಬರೆದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಭ್ರಷ್ಟಾಚಾರ ಚಟುವಟಿಕೆಗಳು ನಡೆಯುತ್ತಿವೆ. ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಈ ಕುರಿತು ನಾವು ಪತ್ರ ಬರೆದರೂ ಚುನಾವಣಾಧಿಕಾರಿಗಳು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದರು.
6
+ ಅಲ್ಲದೆ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ಚುನಾವಣಾಕಾರಿಗಳನ್ನು ತತಕ್ಷಣವೇ ವರ್ಗಾವಣೆಗೊಳಿಸಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಆಯೋಗ ಕ್ರಮ ತೆಗೆದುಕೊಳ್ಳಬೇಕೆಂದು ಗೌಡರು ಪತ್ರದಲ್ಲಿ ಮನವಿ ಮಾಡಿದ್ದರು.
7
+ ಈ ಕ್ಷೇತ್ರದಿಂದ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಸ್ರ್ಪಧಿಸಲಿದ್ದು, ಅವರ ಮೇಲೆ ಕ್ರಮ ಜರುಗಿಸಲು ಸ್ಥಳೀಯ ಅಧಿಕಾರಿಗಳು ಹಿಂದೆಮುಂದೆ ನೋಡುತ್ತಿದ್ದಾರೆ ಎಂದು ಆಪಾದಿಸಲಾಗಿತ್ತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಆಯೋಗ ಡಿ.ಕೆ.ಸುರೇಶ್ ವಿರುದ್ದ ಕೇಳಿಬಂದಿರುವ ಆರೋಪಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದೆ.
eesanje/url_46_195_3.txt ADDED
@@ -0,0 +1,6 @@
 
 
 
 
 
 
 
1
+ ಕೋಲಾರದಲ್ಲಿ ಕಾಂಗ್ರೆಸ್ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಿಕೊಂಡು ಬರುತ್ತೇವೆ : ಕೆ.ಎಚ್.ಮುನಿಯಪ್ಪ
2
+ ಬೆಂಗಳೂರು,ಮಾ.26– ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಗ್ಗಂಟು ಇನ್ನೂ ಇತ್ಯರ್ಥಗೊಂಡಿಲ್ಲ. ಈ ನಡುವೆ ಸಚಿವ ಕೆ.ಎಚ್.ಮುನಿಯಪ್ಪ ಯಾರಿಗೇ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ನಾವು ಹೈಕಮಾಂಡ್‍ಗೆ ನೀಡಿದ್ದೇವೆ, ಅದಕ್ಕೆ ಬದ್ದರಾಗಿರುತ್ತೇವೆ ಎಂದು ತಿಳಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಾನು 7 ಬಾರಿ ಗೆಲುವು ಸಾಧಿಸಿದ್ದೆ. ಅಲ್ಲಿ ಈ ಬಾರಿ ಬಿ.ಎಸ್.ಸುರೇಶ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರ ಕೂಡ ಕಾಂಗ್ರೆಸ್‍ನ ಭದ್ರಕೋಟೆ. ಇಲ್ಲಿ ಡಾ.ಎಂ.ಸಿ.ಸುಧಾಕರ್ ಉಸ್ತುವಾರಿ ಸಚಿವರಾಗಿದ್ದಾರೆ. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯಾಗಿದ್ದೇನೆ.
4
+ ಸಾಮಾನ್ಯವಾಗಿ ಇದು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಒಳಪಡುತ್ತದೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದು ನಮ್ಮ ಮೂವರು ಸಚಿವರ ಜವಾಬ್ದಾರಿಯಾಗಿದೆ ಎಂದರು. ಇತ್ತೀಚೆಗೆ ಪಕ್ಷದ ವರಿಷ್ಠ ನಾಯಕರ ಸಭೆಯಲ್ಲಿ ನಾವು ಭಾಗವಹಿಸಿದ್ದು, ಎಲ್ಲರ ಅಭಿಪ್ರಾಯವನ್ನೂ ಹೇಳಿದ್ದೇವೆ. ಯಾರನ್ನೇ ಅಭ್ಯರ್ಥಿ ಮಾಡಿದರೂ ಕಾಂಗ್ರೆಸ್ ಗೆಲ್ಲಿಸುವ ವಾಗ್ದಾನ ಮಾಡಿದ್ದೇವೆ. ಅಭ್ಯರ್ಥಿಯ ಆಯ್ಕೆಯ ಹೊಣೆಗಾರಿಕೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಬಿಡಲಾಗಿದೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆಂದು ತಿಳಿಸಿದರು.
5
+ ನಾನು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತೇವೆ. ಆದ್ಯತೆ ಮೇರೆಗೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.ರಾಜ್ಯದಲ್ಲಿರುವ 5 ಮೀಸಲು ಲೋಕಸಭಾ ಕ್ಷೇತ್ರಗಳ ಪೈಕಿ ಸಾಮಾನ್ಯವಾಗಿ 2 ಬಲಗೈ ಹಾಗೂ ಇನ್ನೆರೆಡು ಎಡಗೈ ಸಮುದಾಯಕ್ಕೆ ಹಂಚಿಕೆ ಮಾಡಿ, ಒಂದು ಸ್ಥಾನವನ್ನು ಬೋವಿ ಅಥವಾ ಲಂಬಾಣಿಗೆ ನೀಡುವುದು ಸಂಪ್ರದಾಯ.
6
+ ಈ ಬಾರಿ ಮೂರೂ ಕ್ಷೇತ್ರಗಳನ್ನು ಬಲಗೈ ಸಮುದಾಯಕ್ಕೆ ನೀಡಲಾಗಿದೆ. ಎರಡು ಕ್ಷೇತ್ರಗಳಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ.ಯಾರಿಗೇ ಟಿಕೆಟ್ ಕೊಟ್ಟರೂ ನಾವು ಅದನ್ನು ಒಪ್ಪಿಕೊಳ್ಳುತ್ತೇವೆ. ಕಾಂಗ್ರೆಸ್ ಅನ್ನು ಗೆಲ್ಲಿಸುತ್ತೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
eesanje/url_46_195_4.txt ADDED
@@ -0,0 +1,4 @@
 
 
 
 
 
1
+ ಚುನಾವಣೆ ಪ್ರಚಾರಕ್ಕೂ ಮುನ್ನ ಡಿಕೆಶಿ ಟೆಂಪಲ್ ರನ್
2
+ ಬೆಂಗಳೂರು,ಮಾ.26-ಲೋಕಸಭಾ ಚುನಾವಣೆ ಪ್ರಚಾರಕ್ಕೂ ಮುನ್ನ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇವಸ್ಥಾನಗಳ ಭೇಟಿಗೆ ಮುಂದಾಗಿದ್ದಾರೆ. ಇಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ, ಶ್ರೀ ಅಣ್ಣಪ್ಪ ದೇವರ ದರ್ಶನ ಪಡೆದ ಬಳಿಕ ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿಯ ಶಾರದಾಂಬೆ, ಗೌರಿಗದ್ದೆಯ ವಿನಯ್ ಗುರೂಜಿ ಆಶ್ರಮ, ಸಂಜೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
3
+ ನಾಳೆ ಕುಮುಟಾದ ಇಡಗುಂಜಿ ಗಣಪತಿ ದೇವಸ್ಥಾನಕ್ಕೆ, ಮೈಸೂರಿನ ಚಾಮುಂಡೇಶ್ವರಿ ಅದಕ್ಕೂ ಮೊದಲು ಕಬ್ಬಾಳಮ್ಮ, ಕೆಂಕೇರಮ್ಮ ದೇವಸ್ಥಾನಗಳಿಗೆ ದಿಢೀರ್ ಭೇಟಿ ನೀಡುತ್ತಿದ್ದಾರೆ.ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದು ಧರ್ಮಯುದ್ಧ ಪ್ರಾರಂಭವಾಗುತ್ತಿದೆ. ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಖಂಡಿತ ಫಲ ಸಿಗುತ್ತದೆ. ನಾನು ಧರ್ಮವನ್ನು ನಂಬುತ್ತೇನೆ. ನಮ್ಮ ನಂಬಿಕೆಗಳ ಮೇಲೆ ಬದುಕುತ್ತೇವೆ ಎಂದರು.
4
+ ಎಲ್ಲರೂ ಮಾಡುವುದು ನೆಮ್ಮದಿ, ಶಾಂತಿಗಾಗಿ. ಹೀಗಾಗಿ ದೇವಸ್ಥಾನಗಳಿಗೆ ಭೇಟಿ ನೀಡಿ ನಾನು ನನ್ನ ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.ಈ ಮೊದಲು ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಧರ್ಮಸ್ಥಳಕ್ಕೆ ಬಂದು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ಅದಕ್ಕೆ ತಕ್ಕ ಹಾಗೆ ಶಕ್ತಿ ಬಂದಿದೆ ಎಂದರು.