CoolCoder44 commited on
Commit
2bc22cd
·
verified ·
1 Parent(s): 2d41b0b

296a9c2754daf31d0e2eef520337fde4e772f7cde830db46bc4b2d5218315f73

Browse files
Files changed (50) hide show
  1. eesanje/url_46_236_5.txt +8 -0
  2. eesanje/url_46_236_6.txt +11 -0
  3. eesanje/url_46_236_7.txt +6 -0
  4. eesanje/url_46_236_8.txt +7 -0
  5. eesanje/url_46_236_9.txt +14 -0
  6. eesanje/url_46_237_1.txt +12 -0
  7. eesanje/url_46_237_10.txt +8 -0
  8. eesanje/url_46_237_11.txt +6 -0
  9. eesanje/url_46_237_12.txt +9 -0
  10. eesanje/url_46_237_2.txt +10 -0
  11. eesanje/url_46_237_3.txt +10 -0
  12. eesanje/url_46_237_4.txt +12 -0
  13. eesanje/url_46_237_5.txt +4 -0
  14. eesanje/url_46_237_6.txt +5 -0
  15. eesanje/url_46_237_7.txt +5 -0
  16. eesanje/url_46_237_8.txt +16 -0
  17. eesanje/url_46_237_9.txt +8 -0
  18. eesanje/url_46_238_1.txt +9 -0
  19. eesanje/url_46_238_10.txt +7 -0
  20. eesanje/url_46_238_11.txt +8 -0
  21. eesanje/url_46_238_12.txt +8 -0
  22. eesanje/url_46_238_2.txt +6 -0
  23. eesanje/url_46_238_3.txt +8 -0
  24. eesanje/url_46_238_4.txt +10 -0
  25. eesanje/url_46_238_5.txt +6 -0
  26. eesanje/url_46_238_6.txt +10 -0
  27. eesanje/url_46_238_7.txt +14 -0
  28. eesanje/url_46_238_8.txt +7 -0
  29. eesanje/url_46_238_9.txt +5 -0
  30. eesanje/url_46_239_1.txt +6 -0
  31. eesanje/url_46_239_10.txt +4 -0
  32. eesanje/url_46_239_11.txt +10 -0
  33. eesanje/url_46_239_12.txt +4 -0
  34. eesanje/url_46_239_2.txt +8 -0
  35. eesanje/url_46_239_3.txt +6 -0
  36. eesanje/url_46_239_4.txt +5 -0
  37. eesanje/url_46_239_5.txt +6 -0
  38. eesanje/url_46_239_6.txt +15 -0
  39. eesanje/url_46_239_7.txt +3 -0
  40. eesanje/url_46_239_8.txt +7 -0
  41. eesanje/url_46_239_9.txt +6 -0
  42. eesanje/url_46_23_1.txt +7 -0
  43. eesanje/url_46_23_10.txt +13 -0
  44. eesanje/url_46_23_11.txt +19 -0
  45. eesanje/url_46_23_12.txt +6 -0
  46. eesanje/url_46_23_3.txt +11 -0
  47. eesanje/url_46_23_4.txt +10 -0
  48. eesanje/url_46_23_5.txt +7 -0
  49. eesanje/url_46_23_6.txt +9 -0
  50. eesanje/url_46_23_7.txt +8 -0
eesanje/url_46_236_5.txt ADDED
@@ -0,0 +1,8 @@
 
 
 
 
 
 
 
 
 
1
+ ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ
2
+ ಬೆಂಗಳೂರು, ಫೆ.16- ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಒತ್ತು ನೀಡಿದ್ದು, ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದಾರೆ.
3
+ ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು. ಮುಂದಿನ ಸಾಲಿನಲ್ಲಿ ಒಳಿದ ಒಂಭತ್ತು ಜಿಲ್ಲೆಗಳಲ್ಲೂ ಸಹ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
4
+ ಆನೇಕಲ್, ನೆಲಮಂಗಲ, ಹೊಸಕೋಟೆ, ಖಾನಪುರ, ಶಿರಹಟ್ಟಿ, ಎಳಂದೂರು ತಾಲೂಕುಗಳಲ್ಲಿ 100 ತಾಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಶಿಥಿಲಾವ್ಯಸ್ಥೆಯಲ್ಲಿರುವ ಆರೋಗ್ಯ ಕೇಂದ್ರವನ್ನು ಉನ್ನತೀಕರಣಕ್ಕಾಗಿ 75 ಕೋಟಿ ರೂ. ಅನುದಾನ ನೀಡಲಾಗುವುದು.
5
+ ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು
6
+ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಸೌಲಭ್ಯ ಕಾಮಗಾರಿಗಳನ್ನು 150 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಗ್ರಾಮೀಣ ಜನರಿಗೆ 24 ಗಂಟೆಯೂ ತುರ್ತು ಆರೋಗ್ಯ ಸೇವೆ ನೀಡಲು ಮುಂದಿನ ಎರಡು ವರ್ಷದಲ್ಲಿ 25 ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಭಾಗದ 46 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್‍ಡಿಬಿ ಮೂಲಕ ಸ್ಥಳ ಸ್ಥಾಪಿಸಲಾಗುವುದು.
7
+ ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳನ್ನು ಅಗ್ನಿ ಅವಘಡದಿಂದ ರಕ್ಷಿಸಲು 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಶಾಮಕ ವ್ಯವಸ್ಥೆಯನ್ನು 6 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಲಾಗುವುದು. 2025ರೊಳಗೆ ಕ್ಷಯ ರೋಗ ನಿರ್ಮೂಲನೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 87 ಟ್ರೂ-ನಾಟ್ ಮಿಷನ್‍ಗಳನ್ನು ಖರೀದಿಸಲಾಗುವುದು ಎಂದರು.
8
+ ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸಿ ಬಡವರಿಗೆ ಕೈಗೆಟುಕುವ ದರದಲ್ಲಿ ಪ್ರಯೋಗಾಲಯ ಸೇವೆಯನ್ನು ನೀಡಲಾಗುವುದು ಎಂದರು. ಹೀಗೆ ಹಲವು ಯೋಜನೆಗಳನ್ನು ರೂಪಿಸುವ ಮೂಲಕ ಪ್ರತಿಯೊಬ್ಬರಿಗೂ ಉತ್ತಮ ಆರೋ��್ಯ ಸೇವೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
eesanje/url_46_236_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ 3.71 ಲಕ್ಷ ಕೋಟಿ ರೂ. ಬೃಹತ್ ಬಜೆಟ್ ಮಂಡನೆ
2
+ ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು 3.71 ಲಕ್ಷ ಕೋಟಿ ರೂ.ಗಳ ಅಂದಾಜು ವೆಚ್ಚದ ಬೃಹತ್ ಬಜೆಟ್ ಅನ್ನು ಮಂಡಿಸಿದರು. 15ನೇ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯನವರು ಬಜೆಟ್‍ನ ಗಾತ್ರವನ್ನು ಹಿಂದಿನ ಸಾಲಿಗಿಂತಲೂ ಮತ್ತಷ್ಟು ಹಿಗ್ಗಿಸಿದ್ದಾರೆ. ಭಾರತೀಯ ತಯಾರಿಕಾ ಮದ್ಯ (ಐಎಂಎಲ್) ಮತ್ತು ಬಿಯರ್‍ನ ದರಗಳನ್ನು ನೆರೆರಾಜ್ಯಗಳ ಸ್ಲಾಬ್‍ಗನುಗುಣವಾಗಿ ಪರಿಷ್ಕರಿಸುವುದಾಗಿ ಹೇಳುವ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಮದ್ಯಪ್ರಿಯರ ನಶೆಯ ಮೇಲೆ ಪೆಟ್ಟು ನೀಡಿದ್ದಾರೆ.
3
+ ನಮ್ಮ ಮಿಲೆಟ್ ಎಂಬ ಹೊಸ ಕಾರ್ಯಕ್ರಮದ ಮೂಲಕ ಸಿರಿಧಾನ್ಯಗಳ ಮೌಲ್ಯವರ್ಧನೆಗೆ ಆದ್ಯತೆ ನೀಡುವುದು, ಎಪಿಎಂಸಿ ಕಾಯ್ದೆ ಹಿಂಪಡೆಯುವುದು, ಎತ್ತಿನ ಹೊಳೆ ಯೋಜನೆಗೆ ಸಮತೋಲನ ಜಲಾಶಯ ನಿರ್ಮಾಣ ಕಾಮಗಾರಿ ಆರಂಭಿಸುವುದು, ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಜಲಾಶಯಗಳ ಹಿನ್ನೀರಿನ ಪ್ರದೇಶಗಳಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ, ಶಾಲಾ-ಕಾಲೇಜುಗಳ ಸಾಮರಸ್ಯಕ್ಕಾಗಿ ನಾವು ಮನುಜರು ಎಂಬ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದಗಳನ್ನು ಆಯೋಜಿಸುವುದು, ರಾಜ್ಯ ಶಿಕ್ಷಣ ನೀತಿ ಅನುಷ್ಠಾನ, ಬೇರು ಚಿಗುರು ಎಂಬ ವಿನೂತನ ಕಾರ್ಯಕ್ರಮದ ಮೂಲಕ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಹಳೆ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವುದು, ಪ್ರೇರಣಾ ಯೋಜನೆಯ ಮೂಲಕ ತಾಂತ್ರಿಕ ಶಿಕ್ಷಣ ಉನ್ನತೀಕರಣ ಬಜೆಟ್‍ನ ಪ್ರಮುಖ ಅಂಶಗಳಾಗಿವೆ.
4
+ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಲವು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು, ಕೋವಿಡ್‍ನಲ್ಲಿ ಅವ್ಯವಹಾರಗಳ ವಿರುದ್ಧ ಕಠಿಣ ಕ್ರಮ, ಅಬ್ ಅಂಡ್ ಸ್ಕೋಪ್ ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪನೆ, 2024-25ನೇ ಸಾಲಿನಲ್ಲಿ 1,89,893 ಕೋಟಿ ರೂ.ಗಳ ರಾಜ್ಯ ಸ್ವಂತ ತೆರಿಗೆ ಸಂಗ್ರಹಣೆ ಅಂದಾಜಿಸಲಾಗಿದ್ದು, ತೆರಿಗೆಯೇತರ ಮೂಲಗಳಿಂದ 13,500 ಕೋಟಿ ರೂ.ಗಳನ್ನು ನಿರೀಕ್ಷಿಸಿದ್ದಾರೆ.
5
+ ಜೆಟ್ ಏರ್‌ವೇಶ್‌ ಸಂಸ್ಥಾಪಕನಿಗೆ ಕ್ಯಾನ್ಸರ್, ಮಧ್ಯಂತರ ಜಾಮೀನಿಗೆ ಅರ್ಜಿ
6
+ ಕೇಂದ್ರ ಸರ್ಕಾರದಿಂದ 44,885 ಕೋಟಿ ರೂ.ಗಳ ತೆರಿಗೆ ಪಾಲು 15,300 ಕೋಟಿ ರೂ.ಗಳ ಸಹಾಯಧನ ಬರುವ ನಿರೀಕ್ಷೆಯಿದೆ. ಜೊತೆಗೆ 1,05,245 ಕೋಟಿ ರೂ.ಗಳ ಸಾಲ ಮಾಡುವ ಮುನ್ಸೂಚನೆ ನೀಡಿದ್ದಾರೆ. 38 ಕೋಟಿ ರೂ.ಗಳ ಋಣೇತರ ಸ್ವೀಕೃತಿ ಮತ್ತು 213 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಿ ಒಟ್ಟು ಸಂಪನ್ಮೂಲವನ್ನು 3,68,674 ಕೋಟಿ ರೂ.ಗಳೆಂದು ಲೆಕ್ಕ ಹಾಕಿದ್ದಾರೆ. ಇದರ ಜೊತೆ ವೆಚ್ಚಗಳ ಬಾಬ್ತಿನಲ್ಲಿ 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚವನ್ನು ನಿಗದಿ ಮಾಡಿದ್ದಾರೆ. ಬಂಡವಾಳ ವೆಚ್ಚಕ್ಕೆ 55,877 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದರೆ ಸಾಲದ ಮರುಪಾವತಿಗೆ 24,974 ಕೋಟಿ ರೂ.ಗಳನ್ನು ಕಾಯ್ದಿರಿಸಿದ್ದಾರೆ.
7
+ ವಿತ್ತೀಯ ಕೊರತೆ :ಮುಂದಿನ ಆರ್ಥಿಕ ವರ್ಷದಲ್ಲಿ 27,354 ಕೋಟಿ ರೂ.ಗಳನ್ನು ರಾಜಸ್ವ ಕೊರತೆ ಎಂದು ಹಾಗೂ 82,595 ಕೋಟಿ ರೂ.ಗಳನ್ನು ವಿತ್ತೀಯ ಕೊರತೆ ಎಂದು ಅಂದಾಜಿಸಲಾಗಿದೆ. ವಿತ್ತೀಯ ಕೊರತೆಯು ರಾಜ್ಯದ ಜಿಎಸ್‍ಡಿಪಿಯ ಶೇ.2.95 ರಷ್ಟಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದಿನ ಆರ್ಥಿಕ ವರ್ಷಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆ 6,65,095 ಕೋಟಿ ರೂ.ಗಳೆಂದು ಅಂದಾಜಿಸಲಾಗಿದ್ದು, ಬೃಹತ್ ಮೊತ್ತದ ಸಾಲವನ್ನು ಬಿಂಬಿಸಲಾಗಿದೆ. ಆದರೂ ಆರ್ಥಿಕ ಶಿಸ್ತಿನ ಮಿತಿ ಶೇ.25 ರೊಳಗೆ ಸಾಲದ ಮೊತ್ತವಿದ್ದು, ಒಟ್ಟು ಜಿಎಸ್‍ಡಿಪಿಯ ಶೇ.23.68 ರಷ್ಟಿದೆ ಎಂದು ತಿಳಿಸಿದ್ದಾರೆ.
8
+ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡಲಿದೆ ಎಂದು ವಿರೋಧಿಗಳ ಭವಿಷ್ಯವನ್ನು ನಾವು ಸುಳ್ಳು ಮಾಡಿದ್ದೇವೆ. 5 ಖಾತರಿ ಯೋಜನೆಗಳಷ್ಟೇ ಅಲ್ಲದೆ ಹಲವಾರು ಹೊಸ ಕಲ್ಯಾಣ ಯೋಜನೆಗಳಿಗೂ ಮತ್ತು ಮೂಲ ಸೌಕರ್ಯ ಕಾರ್ಯಕ್ರಮಗಳಿಗೂ ಅಗತ್ಯವಿರುವ ಆಯವ್ಯಯವನ್ನು ಒದಗಿಸಿದ್ದೇವೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
9
+ ಪ್ರತಿಯೊಬ್ಬರ ಕಣ್ಣೀರನ್ನು ಒರೆಸುವುದು ಮಹಾತ್ಮ ಗಾಂಧೀಜಿಯವರ ಆಶಯವಾಗಿದೆ. ಇದು ನಮ್ಮ ಇತಿಮಿತಿಯನ್ನು ಮೀರಿದ್ದಾಗಿರಬಹುದು. ಆದರೆ ಕಣ್ಣೀರು ಮತ್ತು ಬವಣೆಗಳು ಇರುವವರೆಗೂ ನಮ್ಮ ಕಾರ್ಯ ಪೂರ್ಣವಾಗುವುದಿಲ್ಲ ಎಂದು ನೆಹರೂ ಅವರ ವಾಣಿಯನ್ನು ಉಲ್ಲೇಖಿಸಿರುವ ಸಿದ್ದರಾಮಯ್ಯ, ಹೆಚ್ಚುತ್ತಿರುವ ಅಸಮಾನತೆ ಮತ್ತು ನಿರುದ್ಯೋಗದಿಂದ ಜರ್ಜರಿತರಾಗಿರುವ ಜನಸಮಾನ್ಯರು, ರೈತರು, ಯುವಜನರು ಹಾಗೂ ಸಮಾಜಕ ಕಟ್ಟಕಡೆಯ ವರ್ಗದವರಿಗೆ ಅಗತ್ಯವಿರುವ ಬೆಂಬಲವನ್ನು ಒದಗಿಸಲು ಸಮಗ್ರ ಮತ್ತು ಸಮೃದ್ಧ ಕರ್ನಾಟಕವನ್ನು ಕಲ್ಪಿಸುವ ದೃಷ್ಟಿಕೋನದೊಂದಿಗೆ ಕಲ್ಯಾಣ ಆಧಾರಿತ ಬಜೆಟ್ ಅನ್ನು ಮಂಡಿಸುತ್ತಿದ್ದೇನೆ ಎಂದು ವಿವರಿಸಿದ್ದಾರೆ.
10
+ ಜೆಟ್ ಏರ್‌ವೇಶ್‌ ಸಂಸ್ಥಾಪಕನಿಗೆ ಕ್ಯಾನ್ಸರ್, ಮಧ್ಯಂತರ ಜಾಮೀನಿಗೆ ಅರ್ಜಿ
11
+ ವಿತ್ತೀಯ ಕೊರತೆಯನ್ನು ಶೇ.3 ರೊಳಗೆ, ಹೊಣೆಗಾರಿಕೆ ಶೇ.25 ರೊಳಗೆ ಕಾಯ್ದುಕೊಳ್ಳಲಾಗಿದೆ. ಮಧ್ಯಮಾವ ವಿತ್ತೀಯ ಯೋಜನೆಯಲ್ಲಿ ಅಂದಾಜಿಸಿರುವಂತೆ ಇನ್ನೆರೆಡು ವರ್ಷದೊಳಗೆ ರಾಜಸ್ವ ಹೆಚ್ಚುವರಿಯನ್ನು ಸಾಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಯವರು ಲೇಖಾನುದಾನದ ಬದಲಿಗೆ ಪೂರ್ಣ ಪ್ರಮಾಣದ ಬಜೆಟ್‍ಗೆ ಅಂಗೀಕಾರ ನೀಡುವಂತೆ ಮನವಿ ಮಾಡಿದ್ದಾರೆ.
eesanje/url_46_236_7.txt ADDED
@@ -0,0 +1,6 @@
 
 
 
 
 
 
 
1
+ ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು
2
+ ಬೆಂಗಳೂರು,ಫೆ.16- ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಭರ್ಜರಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಐದು ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗು ಅನ್ನ ಭಾಗ್ಯ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ ಒಟ್ಟು 52 ಸಾವಿರ ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.
3
+ ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಂತರ ಜನರ ಕೈ ಹಂಚಿಕೆ ಮಾಡಲಾಗುತ್ತಿದ್ದು, ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ 50 ಸಾವಿರದಿಂದ 55 ಸಾವಿರದವರೆಗೆ ಒದಗಿಸಲಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಇಡೀ ಜಗತ್ತು ಕರ್ನಾಟಕದತ್ತ ನೋಡುತ್ತಿದೆ. ಹಲವು ದೇಶಗಳು ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳು ಅಧ್ಯಯನ ನಡೆಸಿ ಇದನ್ನು ಶ್ಲಾಘಿಸಿವೆ. ಗ್ಯಾರಂಟಿ ಯೋಜನೆಗಳು ದೃಢವಾಗಲು ಕೇವಲ ಅಧ್ಯಯನ ಮಾತ್ರವಲ್ಲ ಬಸ್ ಹತ್ತುವ ಮುನ್ನ ತಲೆ ಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಲಕ್ಷಾಂತರ ಮಹಿಳೆಯರ ಪ್ರಾರ್ಥನೆ,ಯುವನಿ ನೆರವು ನಿರುದ್ಯೋಗಿ ಯುವಕನ ಆನಂದಬಾಸ್ಪ ನನ್ನ ನಂಬಿಕೆಯನ್ನು ಇನ್ನಷ್ಟು ಬಲಪಡಿಸಿದೆ. ಅಭಿವೃದ್ಧಿಯ ಫಲವನ್ನು ಜನಸಾಮಾನ್ಯರಿಗೆ ಹಿಂದುರುಗಿಸುವಲ್ಲಿ ಅನನ್ಯವಾದ ಸಂತೃಪ್ತಿಯಿದೆ ಎಂದು ಹೇಳಿದ್ದಾರೆ.
4
+ ಜೆಟ್ ಏರ್‌ವೇಶ್‌ ಸಂಸ್ಥಾಪಕನಿಗೆ ಕ್ಯಾನ್ಸರ್, ಮಧ್ಯಂತರ ಜಾಮೀನಿಗೆ ಅರ್ಜಿ
5
+ ನಮ್ಮ ವಿರೋಧಿಗಳು ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸಿ, ರಾಜ್ಯ ಬೊಕ್ಕಸದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳಿ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಸಂಕಷ್ಟಗಳಿಗೆ ಸ್ಪಂದಿಸಲಾಗದವರು ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇಂಥ ಟೀಕೆಗಳನ್ನು ಮಾಡುತ್ತಾರೆ. ಇನ್ನೊಂದೆಡೆ ನಮ್ಮ ಗ್ಯಾರಂಟಿಗಳನ್ನು ಕದ್ದು ಅವರ ಗ್ಯಾರಂಟಿಗಳೆಂದು ನಂಬಿಸಲು ಹೆಣಗಾಡುತ್ತಿದ್ದಾರೆ ಇಂತಹ ಟೀಕೆಗಳಿಗೆ ನಾನಲ್ಲ, ಶರಣರೇ ಉತ್ತರ ನೀಡಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
6
+ ಮನ ಶುದ್ದವಿಲ್ಲದವಂಗೆ ದ್ರವ್ಯದ ಬಡತನವಲ್ಲದೆಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿಸದ್ಭಕ್ತಂಗೆ ಎತ್ತ ನೋಡಿದಡತ್ತ ಲಕ್ಷಿ ತಾನಾಗಿಪ್ಪಳುಮಾರಯ್ಯ ಪ್ರಿಯ ಅಮರೇಶ್ವರ ಲಿಂಗದ ಸೇವೆಯುಳ್ಳನ್ನಕ್ಕರ ಎಂದು ಶರಣೆ ಆಯ್ದಕ್ಕಿ ಲಕ್ಕಮ್ಮ ಅವರ ವಚನವನ್ನು ಉಲ್ಲೇಖಿಸಿ ಪ್ರತಿಪಕ್ಷದವರಿಗೆ ಸಿದ್ದರಾಮಯ್ಯ ತಿರುಗೇಟು ಕೊಟಿದ್ದಾರೆ.
eesanje/url_46_236_8.txt ADDED
@@ -0,0 +1,7 @@
 
 
 
 
 
 
 
 
1
+ ಬಜೆಟ್ ಹೈಲೈಟ್ಸ್ : ಕರ್ನಾಟಕ ರೈತ ಸಮೃದ್ಧಿ ಸಂಯೋಜನೆ
2
+ ಬೆಂಗಳೂರು,ಫೆ.16- ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ನಿಟ್ಟಿನಲ್ಲಿ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಸಂಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಹೊಸ ಯೋಜನೆಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿಂದು ಬಜೆಟ್ ಮಂಡನೆ ವೇಳೆ ಕೃಷಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಮಣ್ಣಿನ ಗುಣ ಮತ್ತು ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನ ಕುರಿತು ಅರಿವು ಮೂಡಿಸುವುದು ಮತ್ತು ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಕಲ್ಪಿಸುವುದು ಈ ಹೊಸ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
3
+ ಕೃಷಿ ಮತ್ತು ಪೂರಕ ಚಟುವಟಿಕೆ ನೀತಿ ಮತ್ತು ಯೋಜನೆಗಳ ಸಂಯೋಜನೆ ಮತ್ತು ಪರಿಣಾಮಕಾರಿ ಅನುಷ್ಠಾನವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶು ಸಂಗೋಪನಾ ಇಲಾಖೆಗಳ ನಡುವೆ ಸಮನ್ವಯ ಸಾಸಲು ಸಿಎಂ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
4
+ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗುತ್ತಿದ್ದು, ಇದಕ್ಕಾಗಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಇದಲ್ಲದೆ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ರಕ್ಷಿಸಲು ಮತ್ತು ಸಂಗ್ರಹಿಸಲು ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಸಿರಿಧಾನ್ಯ ಮತ್ತು ಮೌಲ್ಯವರ್ಧಕ ಉತ್ಪನ್ನಗಳನ್ನು ಅಗ್ರಿಟೆಕ್ ಕಂಪನಿಗಳು ಮತ್ತು ರಿಟೈಲ್ ಚೈನ್‍ಗಳ ಸಹಭಾಗಿತ್ವದೊಂದಿಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ದೊರಕಿಸಲು ಅನುವು ಮಾಡಿಕೊಡಲಾಗುವುದು. ಇದಕ್ಕಾಗಿ ನಮ್ಮ ಮಿಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಸಿಲಾಗುವುದು.
5
+ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಹೆಸರು ಫೈನಲ್
6
+ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿವರ್ಷ 1 ಸಾವಿರದಂತೆ ಒಟ್ಟು 5 ಸಾವಿರ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು. ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ ಇ-ಸ್ಯಾಪ್ ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲಾಗುವುದು. ಇದಲ್ಲದೆ ರೈತರ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆ ಅೀಧಿನದಲ್ಲಿ ಪ್ರತ್ಯೇಕ ಆಹಾರ ಸಂರಕ್ಷಣಾ ಆಯುಕ್ತಾಲಯ ರಚಿಸಲಾಗುವುದು.
7
+ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣಾ ಮತ್ತು ರಫ್ತು ನಿಗಮ ನಿಯಮಿತ(ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಪಿಎಂಎಫ್‍ಎಂಇ ಯೋಜನೆಯಡಿ 80 ಕೋಟಿ ರೂ.ಗಳನ್ನು ನೀಡಲಾಗುವುದು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಲ್ಲಿರುವ ವಿಮಾನನಿಲ್ದಾಣಗಳ ಹತ್ತಿರ ಆಹಾರ ಪಾರ್ಕ್ ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಇದನ್ನು ಸ್ಥಾಪಿಸಲಾಗುವುದು.ಕೃಷಿವಲಯದ ಸ್ಟಾರ್ಟ್‍ಅಪ್‍ಗಳನ್ನು ಉತ್ತೇಜಿಸಲಾಗುವುದು. ಮಂಡ್ಯ ಜಿಲ್ಲೆಯ ವಿಸಿ ಫಾರ್ಮ್‍ನಲ್ಲಿ ಹೊಸ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತಜ್ಞರ ಸಮಿತಿ ರಚಿಸಲಾಗುವುದು.
eesanje/url_46_236_9.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಕರ್ನಾಟಕ ಬಜೆಟ್ : 2024-25 ( )
2
+ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ.
3
+
4
+
5
+
6
+ ₹: ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ನಿಟ್ಟಿನಲ್ಲಿ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಸಂಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಹೊಸ ಯೋಜನೆಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
7
+ ₹: ವಿಧಾನಸಭೆಯಲ್ಲಿಂದು ಬಜೆಟ್ ಮಂಡನೆ ವೇಳೆ ಕೃಷಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಮಣ್ಣಿನ ಗುಣ ಮತ್ತು ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನ ಕುರಿತು ಅರಿವು ಮೂಡಿಸುವುದು ಮತ್ತು ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಕಲ್ಪಿಸುವುದು ಈ ಹೊಸ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
8
+ ₹: ಕೃಷಿ ಮತ್ತು ಪೂರಕ ಚಟುವಟಿಕೆ ನೀತಿ ಮತ್ತು ಯೋಜನೆಗಳ ಸಂಯೋಜನೆ ಮತ್ತು ಪರಿಣಾಮಕಾರಿ ಅನುಷ್ಠಾನವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶು ಸಂಗೋಪನಾ ಇಲಾಖೆಗಳ ನಡುವೆ ಸಮನ್ವಯ ಸಾಸಲು ಸಿಎಂ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ.
9
+ ₹: ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗುತ್ತಿದ್ದು, ಇದಕ್ಕಾಗಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಇದಲ್ಲದೆ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ರಕ್ಷಿಸಲು ಮತ್ತು ಸಂಗ್ರಹಿಸಲು ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು.
10
+ ₹: ಸಿರಿಧಾನ್ಯ ಮತ್ತು ಮೌಲ್ಯವರ್ಧಕ ಉತ್ಪನ್ನಗಳನ್ನು ಅಗ್ರಿಟೆಕ್ ಕಂಪನಿಗಳು ಮತ್ತು ರಿಟೈಲ್ ಚೈನ್‍ಗಳ ಸಹಭಾಗಿತ್ವದೊಂದಿಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ದೊರಕಿಸಲು ಅನುವು ಮಾಡಿಕೊಡಲಾಗುವುದು. ಇದಕ್ಕಾಗಿ ನಮ್ಮ ಮಿಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಸಿಲಾಗುವುದು.
11
+ ₹: ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿವರ್ಷ 1 ಸಾವಿರದಂತೆ ಒಟ್ಟು 5 ಸಾವಿರ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು. ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ ಇ-ಸ್ಯಾಪ್ ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲಾಗುವುದು. ಇದಲ್ಲದೆ ರೈತರ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆ ಅೀಧಿನದಲ್ಲಿ ಪ್ರತ್ಯೇಕ ಆಹಾರ ಸಂರಕ್ಷಣಾ ಆಯುಕ್ತಾಲಯ ರಚಿಸಲಾಗುವುದು.
12
+ ₹: ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣಾ ಮತ್ತು ರಫ್ತು ನಿಗಮ ನಿಯಮಿತ(ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಪಿಎಂಎಫ್‍ಎಂಇ ಯೋಜನೆಯಡಿ 80 ಕೋಟಿ ರೂ.ಗಳನ್ನು ನೀಡಲಾಗುವುದು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಲ್ಲಿರುವ ವಿಮಾನನಿಲ್ದಾಣಗಳ ಹತ್ತಿರ ಆಹಾರ ಪಾರ್ಕ್ ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಇದನ್ನು ಸ್ಥಾಪಿಸಲಾಗುವುದು.ಕೃಷಿವಲಯದ ಸ್ಟಾರ್ಟ್‍ಅಪ್‍ಗಳನ್ನು ಉತ್ತೇಜಿಸಲಾಗುವುದು. ಮಂಡ್ಯ ಜಿಲ್ಲೆಯ ವಿಸಿ ಫಾರ್ಮ್‍ನಲ್ಲಿ ಹೊಸ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತಜ್ಞರ ಸಮಿತಿ ರಚಿಸಲಾಗುವುದು.
13
+
14
+ ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-02-2024)
eesanje/url_46_237_1.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿದ್ದರಾಮಯ್ಯ ಕ್ಷಮೆಗೆ ಬಿಜೆಪಿ ಪಟ್ಟು
2
+ ಬೆಂಗಳೂರು,ಫೆ.15- ಪ್ರತಿಪಕ್ಷಗಳ ಸದಸ್ಯರನ್ನು ಗೂಂಡಾಗಳೆಂದು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದು ಸಭಾತ್ಯಾಗ ಮಾಡಿದ ಪ್ರಸಂಗ ವಿಧಾನಪರಿಷತ್‍ನಲ್ಲಿ ಜರುಗಿತು. ಕೇಂದ್ರ ಸರ್ಕಾರ ನೀಡುವ ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.
3
+ ಈ ವೇಳೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಕೇಂದ್ರವನ್ನು ಸಮರ್ಥನೆ ಮಾಡಿಕೊಳ್ಳಲು ಮುಂದಾದಾಗ ಮಾತಿನ ಭರದಲ್ಲಿ ಸಿದ್ದರಾಮಯ್ಯ ಗೂಂಡಾಗಳು ಕರ್ನಾಟಕದ ಜನ ಛೀ,ಥೂ ಎಂದು ಛೀಮಾರಿ ಹಾಕುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದ್ದರು. ಸದನ ಸೇರಿದಾಗ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಈ ಸದನಕ್ಕೆ ತನ್ನದೇ ಆದ ಸಂಪ್ರದಾಯವಿದೆ. ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಗೌರವವೂ ಇದೆ.
4
+ ಅವರು ನಾಡಿನ ಮುಖ್ಯಮಂತ್ರಿಗಳು. ಈ ಸದನಕ್ಕೆ ಬಂದು ಮಾತನಾಡುತ್ತಾರೆ ಎಂದರೆ ಎಲ್ಲರಿಗೂ ಕುತೂಹಲ ಇರುತ್ತದೆ. ಚರ್ಚೆಯ ಸಮಯದಲ್ಲಿ ವಾದ-ವಿವಾದಗಳು, ಟೀಕೆ- ಟಿಪ್ಪಣಿಗಳು, ಆರೋಪ-ಪ್ರತ್ಯಾರೋಪ ನಡೆಯುವುದು ಸಹಜ. ಅದರೆ ಪ್ರತಿಪಕ್ಷದ ಸದಸ್ಯರನ್ನು ಗೂಂಡಾಗಳೆಂದು ಕರೆಯುವುದು ಸರಿಯಲ್ಲ. ಇದರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಅವರು ಸದನದ ಸದಸ್ಯರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.
5
+ ರಾಮ ಮಂದಿರಕ್ಕೆ 11ರೂ. ಕೋಟಿ ದೇಣಿಗೆ ನೀಡಿದ್ದ ಉದ್ಯಮಿಗೆ ರಾಜ್ಯಸಭಾ ಟಿಕೆಟ್
6
+ ಆಗ ಸಭಾಪತಿ ಬಸವರಾಜ ಹೊರಟ್ಟಿ ಅವರು ಈಗಾಗಲೇ ನಾನು ಮುಖ್ಯಮಂತ್ರಿಗಳು ಬಳಸಿದ ಪದವನ್ನು ಕಡತದಿಂದ ತೆಗೆದುಹಾಕಲು ಸೂಚಿಸಿದ್ದೇನೆ. ಪುನಃ ಅದೇ ವಿಷಯದ ಬಗ್ಗೆ ಚರ್ಚೆಮಾಡುವುದು ಬೇಡ. ಈಗಾಗಲೇ ಸಾಕಷ್ಟು ಸಮಯ ವ್ಯರ್ಥವಾಗಿದೆ ಎಂದರು. ಮಾತು ಮುಂದುವರೆಸಿದ ಕೋಟಾ ಶ್ರೀನಿವಾಸ್ ಪೂಜಾರಿ,ನಾಳೆ ಯಾರು ಏನು ಬೇಕಾದರೂ ಮಾತನಾಡಲಿ ಕಡತದಿಂದ ತೆಗೆದು ಹಾಕಿದ್ದೇನೆ ಎಂದರೆ.. ಆಡಿದ ಮಾತಿಗೆ ವಿಷಾದ ಬೇಡವೇ? ಕನಿಷ್ಠಪಕ್ಷ ಮುಖ್ಯಮಂತ್ರಿಗಳು ವಿಷಾದವನ್ನು ವ್ಯಕ್ತಪಡಿಸಲಿ ಎಂದು ಮನವಿ ಮಾಡಿಕೊಂಡರು.
7
+ ಆಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಧ್ಯಪ್ರವೇಶಿಸಿ ವಿಧಾನಪರಿಷತ್‍ಗೆ ತನ್ನದೇ ಆದ ಇತಿಹಾಸವಿದೆ. ಕೆಲವು ಬಾರಿ ಮಾತಿನ ಭರದಲ್ಲಿ ಸಂಸದೀಯ ಅಥವಾ ಅಸಂಸದನೀಯ ಪದ ಬಳಕೆ ಮಾಡುತ್ತೇವೆ. ಸಭಾಪತಿಗಳು ಕಡತದಿಂದ ತೆಗೆದುಹಾಕಿದ್ದೇನೆ ಎಂದು ಹೇಳಿದರೆ ಅಲ್ಲಿಗೆ ಮುಗಿದಂತೆ ಪುನಃ ಅದೇ ವಿಷಯದ ಬಗ್ಗೆ ಮಾತನಾಡುವುದಾಗಲಿ, ಅದರ ಬಗ್ಗೆ ಚರ್ಚೆ ಮಾಡುವುದಾಗಲಿ ಸರಿಯಲ್ಲ ಎಂದರು.
8
+ ಪ್ರತಿಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಮಾತನಾಡಿ, ಆವೇಷದಲ್ಲಿ ಯಾರು ಏನು ಬೇಕಾದರೂ ಮಾತನಾಡುತ್ತೇನೆ ಎಂದರೆ ಹೇಗೆ? ಪ್ರತಿಪಕ್ಷದ ಸದಸ್ಯರನ್ನು ಗೂಂಡಾಗಳೆಂದರೆ ಹೇಗೆ? ನಾವ���ನು ಗೂಂಡಾಗಳ? ಕನಿಷ್ಠಪಕ್ಷ ಮುಖ್ಯಮಂತ್ರಿಗಳು ವಿಷಾದ ವ್ಯಕ್ತಪಡಿಸದಿದ್ದರೆ ಹೇಗೇ? ಸಭಾಪತಿಗಳು ನಿರ್ದೇಶನ ನೀಡಬೇಕೆಂದು ಮನವಿ ಮಾಡಿಕೊಂಡರು.
9
+ ಆಗ ಹೊರಟ್ಟಿಯವರು, ನಾನು ಯಾರಿಗೂ ನಿರ್ದೇಶನ ನೀಡಲು ಬರುವುದಿಲ್ಲ. ನಾನು ಯಾರಿಗೂ ಹೀಗೇ ಮಾತನಾಡಿ ಎಂದು ಹೇಳಲಾಗುವುದಿಲ್ಲ. ಸದಸ್ಯರು ಬಳಸಿದ ಸಂಸದೀಯ ಅಥವಾ ಅಸಂಸದೀಯ ಎಂಬುದನ್ನು ಪರಿಶೀಲನೆ ನಡೆಸಬೇಕು. ಸದನದಲ್ಲಿ ಪರಿಸ್ಥಿತಿ ತಿಳಿಯಾಗಲಿ ಎಂದು ನಾನೇ ಆ ಪದಗಳನ್ನು ಕಡತದಿಂದ ತೆಗೆದು ಹಾಕಲು ಸೂಚಿಸಿದ್ದೇನೆ. ಅದಕ್ಕಾಗಿ ಇನ್ನೇನು ಮಾಡಲು ಸಾಧ್ಯ ಎಂದು ಪ್ರಶ್ನೆ ಮಾಡಿದರು.
10
+ ಸಹಿ ಹಾಕಲು 3 ಲಕ್ಷ ಲಂಚ ಕೇಳಿದ್ದ ಮುಖ್ಯ ಶಿಕ್ಷಕ ಲೋಕಾಯುಕ್ತ ಬಲೆ
11
+ ಆಗ ಸಿದ್ದರಾಮಯ್ಯ ನಾನು ಯಾವುದೇ ದುರದ್ದೇಶ ಇಟ್ಟುಕೊಂಡು ಆ ಪದ ಬಳಕೆ ಮಾಡಿಲ್ಲ. ಉತ್ತರಿಸುವ ವೇಳೆ ಸದಸ್ಯ ರುದ್ರೇಗೌಡ ಅವರು ಎದ್ದು ನಿಂತು ಮಾತನಾಡುತ್ತಿದ್ದ ವೇಳೆ ಹಾಗೆ ಹೇಳಿದೆ. ನೀವು ಪದೇ ಪದೇ ನಾನು ಉತ್ತರಿಸುವಾಗ ಎದ್ದು ನಿಂತು ನನ್ನ ಭಾಷಣಕ್ಕೆ ಅಡ್ಡಿಪಡಿಸಿದರೆ ಹೇಗೆ? ಈಗಾಗಲೇ ಸಭಾಪತಿಗಳು ಆ ಪದವನ್ನು ಕಡತದಿಂದ ತೆಗೆದಿದ್ದೇನೆ ಎಂದು ಹೇಳಿದ ಮೇಲೆಯೂ ನೀವು ಸದನಕ್ಕೆ ಅಡ್ಡಿಪಡಿಸಿದರೆ ಹೇಗೆ? ಪರೋಕ್ಷವಾಗಿ ಕ್ಷಮೆ ಇಲ್ಲವೇ ವಿಷಾದ ವ್ಯಕ್ತಪಡಿಸುವುದಿಲ್ಲ ಎಂದು ಹೇಳಿದರು.
12
+ ಈ ಹಂತದಲ್ಲೂ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ ಮುಂದುವರೆಯಿತು. ಸಭಾಪತಿಯವರು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಅವಕಾಶ ನೀಡುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ಸದನವನ್ನು ಸಭಾತ್ಯಾಗ ಮಾಡಿದರು.
eesanje/url_46_237_10.txt ADDED
@@ -0,0 +1,8 @@
 
 
 
 
 
 
 
 
 
1
+ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಬೋಧನೆಗೆ ಚಿಂತನೆ
2
+ ಬೆಂಗಳೂರು,ಫೆ.15- ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಬೋಧನೆಯ ಸೌಲಭ್ಯವನ್ನು ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದ್ದು, ಮಾಧ್ಯಮದ ಆಯ್ಕೆ ಸ್ವಾತಂತ್ರ್ಯವನ್ನು ಪೋಷಕರಿಗೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
3
+ ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ತೀರ್ಥಹಳ್ಳಿಯ ಶಾಸಕ ಅರಗ ಜ್ಞಾನೇಂದ್ರ ತಮ್ಮ ಕ್ಷೇತ್ರದಲ್ಲಿ ಹಲವು ಶಾಲೆಗಳನ್ನು ಇಂಗ್ಲೀಷ್ ಮಾಧ್ಯಮಕ್ಕೆ ಪರಿವರ್ತಿಸಿಕೊಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಖ್ಯಾ ಕೊರತೆ ಕಾರಣಕ್ಕಾಗಿ ಅನುಮತಿ ನಿರಾಕರಿಸಲಾಗುತ್ತಿದೆ. ಪೋಷಕರಿಗೆ ತಮ್ಮ ಮಕ್ಕಳನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಓದಿಸುವ ಹಪಾಹಪಿ ಹೆಚ್ಚಾಗಿದೆ. ಕಷ್ಟಪಟ್ಟಾದರೂ ಹಣ ಖರ್ಚು ಮಾಡಿ ದೂರದೂರುಗಳಿಗೆ ಖಾಸಗಿ ಇಂಗ್ಲೀಷ್ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ.
4
+ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ಅವಕಾಶ ನೀಡದೇ ಇದ್ದರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುವುದಿಲ್ಲ. ಸಹಜವಾಗಿಯೇ ಹಲವು ಶಾಲೆಗಳನ್ನು ಮುಚ್ಚಬೇಕಾಗುತ್ತದೆ. ಕಡಿಮೆ ಅಂಕ ಪಡೆದ ಶಿಕ್ಷಕರು ಖಾಸಗಿ ಶಾಲೆಗಳಲ್ಲಿ ಇಂಗ್ಲೀಷ್ ಬೋಧಿಸಬಹುದಾದರೆ ರ್ಯಾಂಕ್‍ನಲ್ಲಿ ನೇಮಕಾತಿಗೊಂಡಿರುವ ಸರ್ಕಾರಿ ಶಾಲಾ ಶಿಕ್ಷಕರಿಂದ ಇಂಗ್ಲೀಷ್ ಕಲಿಸಲು ಸಾಧ್ಯವಿಲ್ಲವೇ? ಹಿರಿಯ ಅಧಿಕಾರಿಗಳು ತಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗೆ ಸೇರಿಸಿ ಐಎಎಸ್, ಐಪಿಎಸ್ ಮಾಡಬೇಕೆಂದು ಬಯಸುತ್ತಾರೆ. ಗ್ರಾಮೀಣ ಭಾಗದ ಮಕ್ಕಳನ್ನು ನಿಯಮದ ನೆಪವೊಡ್ಡಿ ಬದುಕನ್ನು ಹಾಳುಮಾಡುತ್ತಿದ್ದಾರೆ ಎಂದರು.
5
+ : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು
6
+ ಇದಕ್ಕೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ, ಶಾಸಕರ ಮಾತು ಅಕ್ಷರಶಃ ನಿಜ. ಇಂಗ್ಲೀಷ್‍ಗೆ ಬೇಡಿಕೆ ಹೆಚ್ಚಾಗಿದೆ. ಅದರ ಜೊತೆಗೆ ಕನ್ನಡ ಮಾಧ್ಯಮವನ್ನೂ ಉಳಿಸಲು ಸರ್ಕಾರ ಬದ್ಧವಾಗಿದೆ. ಕಳೆದ 2 ವರ್ಷಗಳಿಂದಲೂ 59 ಇಂಗ್ಲೀಷ್ ಮಾಧ್ಯಮ ಶಾಲೆಗಳಿಗೆ ಆದ್ಯತೆ ನೀಡಲಾಗಿದೆ. ಕೆಲವೆಡೆ ವಿದ್ಯಾರ್ಥಿಗಳ ಕೊರತೆಯಿದೆ. ಮೂಲ ಸೌಲಭ್ಯದ ಸಮಸ್ಯೆ ಕೂಡ ಇದೆ. ನಮ್ಮ ಸರ್ಕಾರ ಸಾಮಾಜಿಕ ಹೊಣೆಗಾರಿಕೆ ನಿಯನ್ನು ಬಳಸಿಕೊಂಡು ಮೂಲಸೌಲಭ್ಯ ಹೆಚ್ಚಿಸಿ, ಇಂಗ್ಲೀಷ್ ಮಾಧ್ಯಮ ಸರ್ಕಾರಿ ಶಾಲೆಗೂ ಹಣ ಕೊಟ್ಟು ಸೇರಿಸಬೇಕಾದಂತಹ ಮಟ್ಟಕ್ಕೆ ಸುಧಾರಣೆ ತರಲಾಗುವುದು ಎಂದು ಹೇಳಿದರು.
7
+ 2025 ರ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಂತಹಂತವಾಗಿ ಈ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಶಿಕ್ಷಕರು ಮೂಲಸೌಲಭ್ಯಕ್ಕೆ ಒತ್ತು ನೀಡಲಾಗುವುದು. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
8
+ ಸಭಾಧ್ಯಕ್ಷರು ಸೇರಿದಂತೆ ಹಲವರು ಈ ವಿಚಾರ ಕುರಿತು ಚರ್ಚೆಗೆ ಆಸಕ್ತಿ ತೋರಿಸಿ, ಇದು ರಾಜ್ಯಮಟ್ಟದ ಸಮಸ್ಯೆಯಾಗಿರುವುದರಿಂದ ನಿಯಮ 69 ರ ಅಡಿ ಮತ್ತಷ್ಟು ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು.
eesanje/url_46_237_11.txt ADDED
@@ -0,0 +1,6 @@
 
 
 
 
 
 
 
1
+ ಶೀಘ್ರವೇ 108 ಆಂಬುಲೆನ್ಸ್ ಅನುಸರಿಸಬೇಕಾದ ಮಾರ್ಗಸೂಚಿ ರಚನೆ
2
+ ಬೆಂಗಳೂರು,ಫೆ.15- 108 ಆರೋಗ್ಯ ಕವಚ ಆಂಬುಲೆನ್ಸ್‍ಗಳ ಸೇವೆಯನ್ನು ಗಡಿ ದಾಟುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಶೀಘ್ರವೇ ಸ್ಪಷ್ಟ ನಿಯಮಾವಳಿ ರೂಪಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
3
+ ವಿಧಾನಸಭೆ ಪ್ರಶ್ನೋತ್ತರದ ಅವಧಿಯಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಡಾ.ಭರತ್ ಶೆಟ್ಟಿ ಅವರು ಪ್ರಶ್ನೆ ಕೇಳಿ ಸೂರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿದರು. ಜೊತೆಗೆ 108 ಆಂಬುಲೆನ್ಸ್‍ಗಳು ಜಿಲ್ಲಾ ಗಡಿ ದಾಟಬಾರದು ಎಂದು ಹೇಳಲಾಗುತ್ತಿದೆ. ನನ್ನ ಕ್ಷೇತ್ರದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಶವ ಸಾಗಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ಗಡಿ ಭಾಗದಲ್ಲಿ ಆಂಬುಲೆನ್ಸ್ ಅನ್ನು ಬದಲಾವಣೆ ಮಾಡಬೇಕಾಯಿತು ಎಂದು ವಿವರಿಸಿದರು.
4
+ ಇದಕ್ಕೆ ಧ್ವನಿಗೂಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‍ರವರು ಆಂಬುಲೆನ್ಸ್ ಪ್ರಯಾಣ ಮಿತಿಯನ್ನು 80 ಕಿ.ಮೀ.ಗೆ ಸೀಮಿತಗೊಳಿಸಲಾಗಿದೆ. ತುರ್ತು ಸಂದರ್ಭದಲ್ಲಿ ವಿನಾಯಿತಿ ನೀಡಲು ಮಾರ್ಗಸೂಚಿಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.
5
+ : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು
6
+ ಉತ್ತರ ನೀಡಿದ ಸಚಿವ ದಿನೇಶ್ ಗುಂಡೂರಾವ್, ಆಂಬುಲೆನ್ಸ್ ಸೇವೆ ದುರುಪಯೋಗವಾಗಬಾರದು ಎಂಬ ಕಾರಣಕ್ಕಾಗಿ ಗಡಿಮಿತಿಯನ್ನು ನಿಗದಿ ಪಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ವಿನಾಯಿತಿ ನೀಡುವ ಕುರಿತು ಚರ್ಚೆ ಮಾಡುತ್ತೇವೆ. ಸದ್ಯಕ್ಕೆ 715 ಆಂಬುಲೆನ್ಸ್‍ಗಳು ಮಾತ್ರ 108 ಆರೋಗ್ಯ ಕವಚ ಸೇವೆಯಲ್ಲಿವೆ. ಈ ಪರಿಸ್ಥಿತಿಯಲ್ಲಿ ಸೂರತ್ಕಲ್‍ಗೆ ಹೆಚ್ಚುವರಿ ಆಂಬುಲೆನ್ಸ್ ನೀಡಲು ಸಾಧ್ಯವಿಲ್ಲ. ಆರೋಗ್ಯ ಕವಚಕ್ಕಾಗಿ ಹೊಸ ಟೆಂಡರ್ ಕರೆಯಲು ಸಿದ್ಧತೆ ನಡೆಸಲಾಗಿದೆ. ಆ ವೇಳೆ ಹೆಚ್ಚುವರಿ ಆಂಬುಲೆನ್ಸ್‍ಗಳ ಕಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
eesanje/url_46_237_12.txt ADDED
@@ -0,0 +1,9 @@
 
 
 
 
 
 
 
 
 
 
1
+ & ಹೊಸ ಕಾರ್ಡ್‍ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್
2
+ ಬೆಂಗಳೂರು,ಫೆ.15- ಪಡಿತರ ಚೀಟಿಗಳಿಗಾಗಿ ಬಾಕಿ ಇರುವ ಅರ್ಜಿಗಳನ್ನು ಮಾರ್ಚ್ 31 ರೊಳಗಾಗಿ ಇತ್ಯರ್ಥಗೊಳಿಸಿ ಏಪ್ರಿಲ್ 1 ರಿಂದ ಬಿಪಿಎಲ್, ಎಪಿಎಲ್ ಕಾರ್ಡ್‍ಗಳಿಗೆ ಹೊಸದಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಪ್ರಸ್ತಾವ ವ್ಯಾಪಕ ಚರ್ಚೆಗೆ ಗ್ರಾಸವಾಯಿತು.
3
+ ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು (ಬಿಪಿಎಲ್) ಪಡೆಯಲು ಸಾಕಷ್ಟು ನಿಯಮಗಳನ್ನು ರೂಪಿಸಲಾಗಿದೆ. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಜಿಎಸ್‍ಟಿ, ಆದಾಯ ಸೇವಾ ತೆರಿಗೆ, ವೃತ್ತಿ ತೆರಿಗೆ ಪಾವತಿಸುವವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರಪ್ರದೇಶಗಳಲ್ಲಿ ಸಾವಿರ ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತಕ್ಕಾಗಿ ಹೊಂದಿರುವ ಕುಟುಂಬಗಳು ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನ ಅಂದರೆ, ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳನ್ನು ಹೊರತುಪಡಿಸಿ 4 ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳನ್ನೂ ಬಿಪಿಎಲ್ ವ್ಯಾಪ್ತಿಯಿಂದ ಹೊರಗಿಡಲಾಗಿದೆ.
4
+ ಕುಟುಂಬದ ಆದಾಯ 1.20 ಲಕ್ಷ ರೂ.ಗಿಂತ ಹೆಚ್ಚಿದ್ದರೆ ಅವರಿಗೂ ಬಿಪಿಎಲ್‍ಗೆ ಅವಕಾಶವಿಲ್ಲ ಎಂದರು.ಈ ಹಿಂದಿನ ಸರ್ಕಾರದ ಅವಧಿಯಲ್ಲಿ 2.95 ಲಕ್ಷ ಅರ್ಜಿಗಳನ್ನು ಎಪಿಎಲ್ ಹಾಗೂ ಬಿಪಿಎಲ್‍ಗಾಗಿ ಸ್ವೀಕರಿಸಲಾಗಿತ್ತು. ಚುನಾವಣಾ ಕಾರಣಕ್ಕೆ ಹೊಸಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಿದ್ದರಿಂದ ಅರ್ಜಿಗಳು ಬಾಕಿ ಉಳಿದಿದ್ದವು. ಈವರೆಗೂ ಅವುಗಳ ಪೈಕಿ 57 ಸಾವಿರ ಅರ್ಜಿಗಳಿಗೆ ಕಾರ್ಡ್ ನೀಡಲಾಗಿದೆ. ಬಾಕಿ ಇರುವ ಅರ್ಜಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ಆಯುಕ್ತರು ಮತ್ತು ಉಪನಿರ್ದೇಶಕರು ಸ್ಥಳ ಪರಿಶೀಲನೆ ನಡೆಸಿ ಮಾರ್ಚ್ 31ರೊಳಗೆ ಇತ್ಯರ್ಥಪಡಿಸಲು ಗಡುವು ನೀಡಲಾಗಿದೆ.
5
+ ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ
6
+ ಬಳಿಕ ಹೊಸ ಕಾರ್ಡ್‍ಗಳಿಗೆ ಎಲ್ಲಾ ಶಾಸಕರ ಬೇಡಿಕೆಯಂತೆ ಏಪ್ರಿಲ್ 1 ರಿಂದಲೇ ಅರ್ಜಿ ಸ್ವೀಕರಿಸಲಾಗುವುದು. ಸ್ವೀಕೃತಗೊಂಡ ಅರ್ಜಿಗಳನ್ನು 1 ತಿಂಗಳೊಳಗಾಗಿ ಇತ್ಯರ್ಥಪಡಿಸಲಾಗುವುದು ಎಂದು ಭರವಸೆ ನೀಡಿದರು. ವೈದ್ಯಕೀಯ ಅಗತ್ಯಕ್ಕನುಗುಣವಾಗಿ ಸ್ವೀಕರಿಸಲಾದ 744 ಅರ್ಜಿಗಳಿಗೂ ಪಡಿತರ ಚೀಟಿಗಳನ್ನು ನೀಡಲಾಗಿದೆ. ಇಂತಹ ಅರ್ಜಿಗಳನ್ನು ವಾರದೊಳಗಾಗಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.
7
+ ಅನ್ನಭಾಗ್ಯ ಯೋಜನೆಯಡ��� ನಗದು ಜಮಾವಣೆಗೊಳ್ಳುತ್ತಿದ್ದು, ಶೇ.95 ರಷ್ಟು ಜನರಿಗೆ ಸೌಲಭ್ಯ ಸಿಕ್ಕಿದೆ. ತಾಂತ್ರಿಕ ಕಾರಣದಿಂದ ಶೇ.5 ರಷ್ಟು ಮಾತ್ರ ವ್ಯತ್ಯಾಸವಾಗಿದೆ. ಈ ಹಿಂದೆ ಮೂಡಿಗೆರೆ ಕ್ಷೇತ್ರದಲ್ಲಿ 599 ಜನ 4 ಚಕ್ರದ ವಾಹನ ಹೊಂದಿದ್ದಾರೆ ಎಂಬ ಕಾರಣಕ್ಕೆ ಬಿಪಿಎಲ್‍ನಿಂದ ಕೈಬಿಡಲಾಗಿತ್ತು. ಅವರಿಗೆ ಮತ್ತೆ ಬಡತನ ರೇಖೆಯ ಒಳಗಿನ ಕಾರ್ಡ್ ನೀಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
8
+ ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ
9
+ ಈ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಸರ್ಕಾರ ರಾಜ್ಯಪಾಲರ ಭಾಷಣದಲ್ಲಿ 1.20 ಕೋಟಿ ಕುಟುಂಬಗಳು ಬಿಪಿಎಲ್‍ನಿಂದ ಹೊರಗೆ ಬಂದಿದ್ದಾರೆ ಎಂದು ತಿಳಿಸಲಾಗಿದೆ. ಅದರ ಹೊರತಾಗಿಯೂ ನಾವಿಲ್ಲಿ ಬಿಪಿಎಲ್ ಕಾರ್ಡ್‍ಗಳ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಅದರ ಅರ್ಥ ಪಂಚಖಾತ್ರಿ ಯೋಜನೆಗಳು ವೈಫಲ್ಯವಾಗಿವೆ ಎಂದಲ್ಲವೇ ಎಂದು ಪ್ರಶ್ನಿಸಿದರು. ವಿರೋಧಪಕ್ಷದ ನಾಯಕ ಆರ್.ಅಶೋಕ್, ಅರಗ ಜ್ಞಾನೇಂದ್ರ, ಕೆ.ಎಸ್.ಬಸಂತಪ್ಪ ಸೇರಿದಂತೆ ಹಲವು ಶಾಸಕರು ಚರ್ಚೆಯಲ್ಲಿ ಭಾಗವಹಿಸಿ ಸಲಹೆ ನೀಡಿದರು.
eesanje/url_46_237_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಯುವತಿಯ ಫೋಟೋ ಬಳಸಿಕೊಂಡು ಜೈಲಿನಿಂದಲೇ ರೌಡಿ ಬ್ಲಾಕ್‍ಮೇಲ್
2
+ ಬೆಂಗಳೂರು, ಫೆ.15- ಯುವತಿಯ ಫೋಟೋ ಬಳಸಿಕೊಂಡು ಬೇರೆ ಯಾರದ್ದೊ ನಗ್ನ ದೇಹಕ್ಕೆ ಅಳವಡಿಸಿ ವಿಡಿಯೋಗಳನ್ನು ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಹಣಕ್ಕಾಗಿ ಪೀಡಿಸುತ್ತಿದ್ದ ರೌಡಿ ಹಾಗೂ ಆತನ ಸಹಚರನ ವಿರುದ್ಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ಯುವತಿಯ ತಾಯಿ ದೂರು ನೀಡಿದ್ದಾರೆ.
3
+ ಜೈಲಿನಲ್ಲಿರುವ ರೌಡಿ ಮನು ಅಲಿಯಾಸ್ ಕೆಂಚ ಎಂಬಾತ ಕಳೆದ ಆಗಸ್ಟ್‍ನಲ್ಲಿ ಯುವತಿ ತಾಯಿಗೆ ದೂರವಾಣಿ ಕರೆ ಮಾಡಿ ನಿಮ್ಮ ಮಗಳ ಬೆತ್ತಲೆ ಫೋಟೋಗಳು ನನ್ನ ಬಳಿ ಇವೆ. ನೀವು 40 ಸಾವಿರ ಹಣ ಕೊಡದಿದ್ದರೆ ಆ ಫೋಟೋಗಳನ್ನು ನಿನ್ನ ಅಳಿಯನಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಯುವತಿಯ ತಾಯಿ ರೌಡಿ ಕೆಂಚ ಹೇಳಿದ ಚೋಟು ಎಂಬಾತನ ಖಾತೆಗೆ ಆನ್‍ಲೈನ್ ಮೂಲಕ 20 ಸಾವಿರ ಹಣ ಹಾಗೂ ಮತ್ತೊಬ್ಬನಿಗೆ 20 ಸಾವಿರ ಹಣವನ್ನು ಹಾಕಿಸಿದ್ದಾರೆ.
4
+ ಅಂತರ್ಧರ್ಮೀಯ ಸಾಮರಸ್ಯಕ್ಕೆ ಸಾಕ್ಷಿಯಾದ ಸ್ವಾಮಿ ನಾರಾಯಣ ದೇಗುಲ
5
+ ಫೆ. 9ರಂದು ಮತ್ತೆ ಯುವತಿ ತಾಯಿಯ ಮೊಬೈಲ್‍ಗೆ ಕಾರ್ತಿಕ್ ಎಂಬಾತ ವಾಟ್ಸಾಪ್ ಕಾಲ್ ಮಾಡಿ ನಾನು ಮನು ಸ್ನೇಹಿತ ನಿಮ್ಮ ಮಗಳ ಫೋಟೊಗಳು ಮತ್ತು ವಿಡಿಯೋ ನಮ್ಮ ಬಳಿ ಇವೆ. ಮನು ನಿಮ್ಮ ಬಳಿ 5 ಲಕ್ಷ ಹಣ ಕೇಳಿದ್ದು, ನೀವು ಹಣ ಕೊಡದಿದ್ದರೆ ನಿಮ್ಮ ಮಗಳ ಫೋಟೊ ಮತ್ತು ವಿಡಿಯೋಗಳನ್ನು ನಿಮ್ಮ ಅಳಿಯನಿಗೆ ಕಳುಹಿಸುವುದಾಗಿ ಬೇಡಿಕೆ ಇಟ್ಟಿದ್ದಾನೆ.
6
+ ಮತ್ತೆ ಕರೆ ಮಾಡಿ ನೀವು ನಾನು ಹೇಳುವ ನಂಬರ್‍ಗೆ ಕರೆ ಮಾಡಿ ಆತನ ಕೈಯಲ್ಲಿ ಹಣ ಕಳುಹಿಸುವಂತೆ ಬೆದರಿಕೆವೊಡ್ಡಿದ್ದಾನೆ. ಮತ್ತೆ ಫೆ.12ರಂದು ರೌಡಿ ಮನು, ಸ್ನೇಹಿತ ಕಾರ್ತಿಕ್ ಮತ್ತು ಆತನ ಕಡೆಯ ಹುಡುಗರು ಹಲವಾರು ಬಾರಿ ವಾಟ್ಸಪ್ ಕರೆಗಳನ್ನು ಮತ್ತು ಫೇಸ್‍ಬುಕ್ ಮೆಸೆಂಜರ್ ಕಾಲ್‍ಗಳನ್ನು ಮಾಡಿ ಅವಾಚ್ಯವಾಗಿ ಬೈಯ್ದು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
7
+ ಪದೇ ಪದೇ ಹಣಕ್ಕಾಗಿ ಪೀಡಿಸಿ ತೊಂದರೆ ಕೊಡುತ್ತಿರುವ ರೌಡಿ ಮನು ಅಲಿಯಾಸ್ ಕೆಂಚ, ಆತನ ಸ್ನೇಹಿತ ಕಾರ್ತಿಕ್ ಹಾಗೂ ಆತನ ಸಹಚರರು ನನ್ನ ಮಗಳ ಮುಖ ಇರುವ ಫೋಟೋ ಮತ್ತು ವಿಡಿಯೋಗಳನ್ನು ಸೃಷ್ಟಿಸಿಕೊಂಡು ಅವುಗಳನ್ನು ತಮ್ಮ ಬಳಿ ಇಟ್ಟುಕೊಂಡು ನನಗೆ ಮತ್ತು ಮಗಳಿಗೆ ಕಳುಹಿಸಿ ನಮ್ಮಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಮಾನಸಿಕವಾಗಿ ಹಿಂಸೆ ನೀಡುತ್ತಿರುವ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವತಿಯ ತಾಯಿ ಯಲಹಂಕ ನ್ಯೂಟೌನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
8
+ ರಾಮ ಮಂದಿರಕ್ಕೆ 11ರೂ. ಕೋಟಿ ದೇಣಿಗೆ ನೀಡಿದ್ದ ಉದ್ಯಮಿಗೆ ರಾಜ್ಯಸಭಾ ಟಿಕೆಟ್
9
+ ಸಿಸಿಬಿಗೆ ವರ್ಗಾವಣೆ:ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಿದ್ದಾರೆ.
10
+ ಜೈಲಿನಲ್ಲಿ ಮೊಬೈಲ್ ಬಳಕೆ:ಕಾರಾಗೃಹಗಳಲ್ಲಿರುವ ಖೈದಿಗಳ ಬಳಿ ಮೊಬೈಲ್ ಹೇಗೆ ಬಂತು ಎಂಬುವುದು ನಿಗೂಢವಾಗಿದೆ. ಜೈಲಿನಲ್ಲಿದ್ದುಕೊಂಡು ಮೊಬೈಲ್ ಫೋನ್ ಉಪಯೋಗಿಸಿ ಹೊರಗಿನವರಿಗೆ ಬೆದರಿಕೆ ಹಾಕುವುದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಎಷ್ಟೇ ಕ್ರಮ ಕೈಗೊಂಡರು ಸಾಧ್ಯವಾಗದಿರುವುದು ಈ ಪ್ರಕರಣವೇ ಸಾಕ್ಷಿ. ಇನ್ನು ಮುಂದಾದರೂ ಕಾರಾಗೃಹಗಳಲ್ಲಿರುವ ಖೈದಿಗಳ ಬಗ್ಗೆ ಜೈಲು ಸಿಬ್ಬಂದಿ ಹದ್ದಿನ ಕಣ್ಣಿಟ್ಟು ಅವರ ಚಲನವಲನ ಗಮನಿಸಿದರೆ ಮುಂದೆ ನಡೆಯಬಹುದಾದ ದುಷ್ಕøತ್ಯಗಳನ್ನು ತಡೆಯಬಹುದಾಗಿದೆಂಬುವುದು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
eesanje/url_46_237_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಲೋಕಸಭಾ ಚುನಾವಣೆ : ಬೆಂಗಳೂರಿನಿಂದ ರಾಜೀವ್ ಚಂದ್ರಶೇಖರ್ ಸ್ಪರ್ಧೆ..?
2
+ ನವದೆಹಲಿ,ಫೆ.15- ಕೇಂದ್ರ ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಬೆಂಗಳೂರು ಉತ್ತರ ಇಲ್ಲವೇ ದಕ್ಷಿಣ ಲೋಕಸಭಾ ಕ್ಷೇತ್ರದ ಒಂದು ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
3
+ ರಾಜೀವ್ ಚಂದ್ರಶೇಖರ್ ಅವರ ರಾಜ್ಯಸಭೆ ಅವಧಿ ಬರುವ ಏಪ್ರಿಲ್‍ನಲ್ಲಿ ಪೂರ್ಣಗೊಳ್ಳುತ್ತಿದ್ದರೂ ಅವರನ್ನು ಮತ್ತೊಂದು ಅವಧಿಗೆ ರಾಜ್ಯಸಭೆ ಅಭ್ಯರ್ಥಿಯನ್ನಾಗಿಸದಿರಲು ತೀರ್ಮಾನಿಸಿರುವುದು ಇದೇ ಕಾರಣಕ್ಕೆ ಎಂದು ವರದಿಯಾಗಿದೆ. ಬರುವ ಏಪ್ರಿಲ್‍ನಲ್ಲಿ ತಮ್ಮ ರಾಜ್ಯಸಭೆಯ ಅವ ಪೂರ್ಣಗೊಳ್ಳಲಿರುವ ಏಳು ಕೇಂದ್ರ ಸಚಿವರನ್ನು ಮರು ನಾಮಕರಣ ಮಾಡದಿರಲು ನಿರ್ಧರಿಸಿರಿವ ಭಾರತೀಯ ಜನತಾ ಪಕ್ಷದ ತೀರ್ಮಾನದ ಹಿಂದೆ ರಾಜಕೀಯ ತಂತ್ರಗಾರಿಕೆ ಅಡಗಿದೆ ಎನ್ನಲಾಗಿದೆ.
4
+ ರಾಜ್ಯಸಭೆಯ ಅವಧಿ ಏಪ್ರಿಲ್‍ನಲ್ಲಿ ಕೊನೆಗೊಳ್ಳುವ ಏಳು ಕೇಂದ್ರ ಸಚಿವರನ್ನು ಆಡಳಿತಾರೂಢ ಬಿಜೆಪಿಯಿಂದ ಮರು ನಾಮನಿರ್ದೇಶನ ಮಾಡದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಿದ್ದಾರೆ ಎಂಬ ಊಹಾಪೋಹಗಳು ಹುಟ್ಟಿಕೊಂಡಿವೆ.
5
+ ಅಂತರ್ಧರ್ಮೀಯ ಸಾಮರಸ್ಯಕ್ಕೆ ಸಾಕ್ಷಿಯಾದ ಸ್ವಾಮಿ ನಾರಾಯಣ ದೇಗುಲ
6
+ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (ಗುಜರಾತ್), ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (ಮಧ್ಯಪ್ರದೇಶ), ಮತ್ತು ಐಟಿ ಸಚಿವ ರಾಜೀವ್ ಚಂದ್ರಶೇಖರ್ (ಕರ್ನಾಟಕ) ಸೇರಿದ್ದಾರೆ. ಪರಿಸರ ಸಚಿವ ಭೂಪೇಂದರ್ ಯಾದವ್ (ರಾಜಸ್ಥಾನ), ಮತ್ತು ಮೀನುಗಾರಿಕಾ ಸಚಿವ ಪರ್ಷೋತ್ತಮ್ ರೂಪಾಲಾ (ಗುಜರಾತ್), ಹಾಗೆಯೇ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಮತ್ತು ಕಿರಿಯ ವಿದೇಶಾಂಗ ಸಚಿವರೂ ಮಹಾರಾಷ್ಟ್ರವನ್ನು ಪ್ರತಿನಿಸುತ್ತಿದ್ದಾರೆ.ಎಲ್ಲಾ ಏಳು ಮಂದಿಯನ್ನು ಈಗ ವಿವಿಧ ರಾಜ್ಯಗಳ ಲೋಕಸಭಾ ಕ್ಷೇತ್ರಗಳಿಂದ ಕಣಕ್ಕಿಳಿಸಬಹುದು ಎಂದು ಮೂಲಗಳು ಮಾಹಿತಿ ನೀಡಿವೆ.
7
+ ಪ್ರಧಾನ್ ಅವರನ್ನು ಅವರ ತವರು ರಾಜ್ಯವಾದ ಒಡಿಶಾದ ಸಂಬಲ್‍ಪುರ ಅಥವಾ ಧೆಕ್ನಾಲ್‍ನಿಂದ ಕಣಕ್ಕಿಳಿಸಬಹುದು ಎಂದು ಮೂಲಗಳು ಸೂಚಿಸುತ್ತವೆ, ಆದರೆ ಯಾದವ್ ರಾಜಸ್ಥಾನದ ಅಲ್ವಾರ್ ಅಥವಾ ಮಹೇಂದ್ರಗಢದಿಂದ ಸ್ರ್ಪಸಬಹುದು ಮತ್ತು ಚಂದ್ರಶೇಖರ್ ಬೆಂಗಳೂರಿನ ಉತ್ತರ, ದಕ್ಷಿಣ, ಕೇಂದ್ರ ಇಲ್ಲಿವೇ ಗ್ರಾಮಾಂತರ ಕ್ಷೇತ್ರದ ನಾಲ್ಕು ಸ್ಥಾನಗಳಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧಿಸುಬಹುದು ಎಂದು ತಿಳಿದುಬಂದಿದೆ.
8
+ ಅದೇ ರೀತಿ, ಮಾಂಡವಿಯಾ ಗುಜರಾತ್‍ನ ಭಾವನಗರ ಅಥವಾ ಸೂರತ್‍ನಿಂದ ಸ್ರ್ಪಸಬಹದು ಆದರೆ ರೂಪಾಲಾ ರಾಜ್‍ಕೋಟ್ ಅನ್ನು ಪಡೆಯಬಹು��ು. ಮುರಳೀಧರನ್ ಅವರು ತವರು ರಾಜ್ಯವಾದ ಕೇರಳದಿಂದ ಕಣಕ್ಕಿಳಿಯಬಹುದು; ಬಿಜೆಪಿಗೆ ಅಲ್ಲಿ ಯಾವುದೇ ಅಸ್ತಿತ್ವವಿಲ್ಲ ಮತ್ತು ಅದರ ಅದೃಷ್ಟವನ್ನು ಪುನರುಜ್ಜೀವನಗೊಳಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.
9
+ ಸಹಿ ಹಾಕಲು 3 ಲಕ್ಷ ಲಂಚ ಕೇಳಿದ್ದ ಮುಖ್ಯ ಶಿಕ್ಷಕ ಲೋಕಾಯುಕ್ತ ಬಲೆ
10
+ ಬಿಜೆಪಿ ಕೆಲವು ದೊಡ್ಡ ಹೆಸರುಗಳನ್ನು ಮಾತ್ರ ಉಳಿಸಿಕೊಂಡಿದೆ, ವಾಸ್ತವವಾಗಿ, ರಾಜ್ಯಸಭೆಯಿಂದ ಕೇವಲ ಇಬ್ಬರು ಕೇಂದ್ರ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (ಒಡಿಶಾ) ಮತ್ತು ಕಿರಿಯ ಮೀನುಗಾರಿಕಾ ಸಚಿವ ಎಲ್ ಮುರುಗನ್ (ಮಧ್ಯಪ್ರದೇಶ). ಎರಡು ಅಥವಾ ಅದಕ್ಕಿಂತ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿದ ನಿರ್ಗಮಿತ ಸಂಸದರು ಪುನರಾವರ್ತನೆಯಾಗಿಲ್ಲ.ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮಾತ್ರ ಇದಕ್ಕೆ ಹೊರತಾಗಿದ್ದಾರೆ. ಆದರೆ, ಅವರನ್ನು 2022ರಲ್ಲಿ ಕಾಂಗ್ರೆಸ್ ಗೆದ್ದ ಹಿಮಾಚಲ ಪ್ರದೇಶದಿಂದ ಗುಜರಾತ್‍ಗೆ ಸ್ಥಳಾಂತರಿಸಲಾಗಿದೆ. ಈ ವಾರ ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಸೇರಿದಂತೆ ಹೊಸ ಸೇರ್ಪಡೆಗಳಿಗೆ ಆದ್ಯತೆ ನೀಡಲಾಗಿದೆ.
eesanje/url_46_237_4.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಪರಿಷತ್‍ನಲ್ಲಿ ತೆರಿಗೆ ಕೋಲಾಹಲ ; ಆಡಳಿತ ಪ್ರತಿಪಕ್ಷಗಳ ವಾಕ್ಸಮರ
2
+ ಬೆಂಗಳೂರು,ಫೆ.15- ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನಲ್ಲಿ ಭಾರೀ ಅನ್ಯಾಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಮಾತು ವಿಧಾನಪರಿಷತ್‍ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಗದ್ದಲ, ಕೋಲಾಹಲ, ಮಾತಿನ ಚಕಮಕಿ, ಆರೋಪ-ಪ್ರತ್ಯಾ ರೋಪಗಳು ನಡೆದು ಸದನವನ್ನು ಕೆಲಕಾಲ ಮುಂದೂಡಿದ ಪ್ರಸಂಗ ಜರುಗಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಯು.ಬಿ.ವೆಂಕಟೇಶ್ ಅವರು ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನ ಮೊತ್ತದ ಬಗ್ಗೆ ಪ್ರಶ್ನೆ ಕೇಳಿದ್ದರು.
3
+ ಇದಕ್ಕೆ ಸದನದಲ್ಲಿ ಸುದೀರ್ಘ ಉತ್ತರ ನೀಡಿದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರದಿಂದ ನಮಗೆ ಒಟ್ಟು 11,495 ಕೋಟಿ ಹಣ ಬರಬೇಕು. ಆದರೆ ಒಂದೇ ಒಂದು ರೂಪಾಯಿಯೂ ಕೊಡದಿರುವ ಕಾರಣ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ ಎಂದು ಆರೋಪಿಸಿದರು.
4
+ ಈ ವೇಳೆ ಬಿಜೆಪಿ ಸದಸ್ಯ ರುದ್ರಗೌಡ ಅವರು ಎದ್ದುನಿಂತು ಮಾತನಾಡಲು ಮುಂದಾಗುತ್ತಿದ್ದಂತೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ನಾನಿನ್ನು ಉತ್ತರವನ್ನೇ ಮುಗಿಸಿಲ್ಲ. ಏಯ್ ಕುಳಿತುಕೊಳ್ಳಿ ಎಂದು ಏರಿದ ಧ್ವನಿಯಲ್ಲಿ ಗದರಿಸಲು ಮುಂದಾದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಈ ರೀತಿ ಮಾತನಾಡುವುದು ಸರಿಯಲ್ಲ. ಸದಸ್ಯರಿಗೆ ನಿರ್ದೇಶನ ನೀಡುವ ಅಧಿಕಾರ ಸಭಾಪತಿಗಳಿಗೆ ಮಾತ್ರ ಇರುತ್ತದೆ. ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
5
+ ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಮುಖ್ಯಮಂತ್ರಿ ಬೆಂಬಲಕ್ಕೆ ಕಾಂಗ್ರೆಸ್ ಸದಸ್ಯರು ನಿಂತರೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಒಂದಾಗಿ ಕಾಂಗ್ರೆಸ್ ವಿರುದ್ಧ ಮುಗಿಬಿದ್ದರು. ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಮಾತನಾಡಿ, ಒಂದು ಪ್ರಶ್ನೆಗೆ 5ಕ್ಕಿಂತ ಹೆಚ್ಚು ನಿಮಿಷ ಸಮಯ ಉತ್ತರ ನೀಡುವಂತಿಲ್ಲ. ಇದು ಉತ್ತರವೋ ಇಲ್ಲ ಭಾಷಣವೋ, ಅವರ ಪ್ರತಿಯೊಂದು ಮಾತಿನಲ್ಲೂ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡೇ ಮಾತನಾಡುತ್ತಿದ್ದಾರೆ. ನಮ್ಮ ಬಳಿಯೂ ದಾಖಲೆಗಳಿವೆ. ಮುಖ್ಯಮಂತ್ರಿಗಳು ಸುಳ್ಳು ಹೇಳಿ ಸದನದ ದಿಕ್ಕು ತಪ್ಪಿಸುವುದು ಬೇಡ ಎಂದು ಆಗ್ರಹಿಸಿದರು.
6
+ ಅಂತರ್ಧರ್ಮೀಯ ಸಾಮರಸ್ಯಕ್ಕೆ ಸಾಕ್ಷಿಯಾದ ಸ್ವಾಮಿ ನಾರಾಯಣ ದೇಗುಲ
7
+ ನಿಮ್ಮ ಬಳಿ ದಾಖಲೆಗಳಿದ್ದರೆ ಹಣಕಾಸು ಆಯೋಗಕ್ಕೆ ಕೊಡಿ. ನೀವು ಏಳು ಕೋಟಿ ಕನ್ನಡಿಗರ ಪರವಾಗಿ ಇದ್ದೀರೋ ಇಲ್ಲವೇ ಕನ್ನಡಿಗರ ವಿರೋಧಿಗಳೋ? ಮೊದಲು ಅದನ್ನು ಬಹಿರಂಗಪಡಿಸಿ. ಸತ್ಯ ಸತ್ಯವೇ. ಸುಳ್ಳು ಸುಳ್ಳೇ. ನೀವು ಎದ್ದು ನಿಂತು ಮಾತನಾಡಿದರೆ ನಾವು ಬಾಯಿಮುಚ್ಚಿಕೊಂಡು ಕೂರುವುದಿಲ್ಲ. ಇಂತಹ ಗೂಂಡಾಗಿರಿ ವರ್ತನೆಗೆ ನಾನು ಜಗ್ಗುವುದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
8
+ ನಾವು ತೆರಿಗೆ ಪಾಲನಷ್ಟೇ ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರದ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿಲ್ಲ. ಇದರಲ್ಲಿ ಯಾವುದೇ ರಾಜಕೀಯವೂ ಇಲ್ಲ. ನಮ್ಮ ತೆರಿಗೆ ಪಾಲಿನ ಹಣವನ್ನು ನಮಗೆ ಕೊಡಿ ಎಂದು ಕೇಳುವುದು ತಪ್ಪೇ? ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಕೊಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ಕೊಟ್ಟಿದ್ದರು. ಸಾಲದಕ್ಕೆ ಮಾಜಿ ಸಿಎಂ ಬೊಮ್ಮಾಯಿ ಅವರು ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಇದುವರೆಗೂ ಒಂದೇ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.
9
+ ಕರ್ನಾಟಕದ ಜನತೆ ನಿಮಗೆ ಛೀ, ತೂ ಎಂದು ಉಗಿಯುತ್ತಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಜನ ನಂಬುವುದಿಲ್ಲ. ಸದನದಲ್ಲಿ ನೀವು ಜೋರು ಮಾಡಿದ ತಕ್ಷಣ ನಾನು ಬಾಯಿ ಮುಚ್ಚಿಕೊಂಡು ಕೂರುವುದಿಲ್ಲ. ಸತ್ಯವನ್ನು ಯಾರಿಂದಲೂ ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ. ಇನ್ನು ಎಷ್ಟು ದಿನ ಇಂಥ ಸುಳ್ಳು ಹೇಳಿಕೊಂಡು ತಿರುಗುತ್ತೀರಿ. ನಿಮ್ಮ ಗೂಂಡಾ ವರ್ತನೆಗೆ ನಾನು ಸುಮ್ಮನಿರಬೇಕೇ? ಎಂದು ಪ್ರಶ್ನಿಸಿದರು.
10
+ ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ : ಅಡ್ಡ ಮತದಾನ ಭೀತಿ
11
+ ನಾವು ಯಾವುದೇ ವಿಷಯದಲ್ಲಿ ಚರ್ಚೆಗೆ ಸಿದ್ದರಿದ್ದೇವೆ. ಬಿಜೆಪಿಯವರಿಗೆ ಸತ್ಯ ಹೇಳಿದರೆ ಆಗುವುದಿಲ್ಲ. ಅವರದ್ದು ಸುಳ್ಳಿನ ಕಂತೆ ಎಂದು ಟೀಕಾ ಪ್ರಹಾರ ನಡೆಸಿದರು. ಈ ವೇಳೆ ಕೋಟಾ ಶ್ರೀನಿವಾಸ್ ಪೂಜಾರಿ, ಗೂಂಡಾಗಿರಿ ಎಂಬ ಪದ ಬಳಸಿದ್ದು ಸರಿಯಲ್ಲ. ವಿಧಾನಸೌಧದಲ್ಲಿ ತೊಡೆ ತಟ್ಟಿದವರು ಯಾರು ಎಂಬುದು ಗೊತ್ತಿದೆ. ನಮ್ಮ ಬಳಿಯೂ ದಾಖಲೆಗಳಿವೆ. ನಾವು ಚರ್ಚೆಗೆ ಸಿದ್ದ ಎಂದು ತಿರುಗೇಟು ನೀಡಿದರು.
12
+ ಈ ವೇಳೆ ಕಾಂಗ್ರೆಸ್ ಸದಸ್ಯರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಘೋಷಣೆ ಕೂಗಿದರು. ಆಗ ಸಭಾಪತಿಯವರು ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಮಾತನಾಡಲು ಅವಕಾಶ ಕೊಡುತ್ತಿದ್ದಂತೆ, ನಾನು ಇನ್ನು ಉತ್ತರ ಕೊಡಬೇಕು. ಪ್ರಶ್ನೆ ಕೇಳಿದವರು ಸುಮ್ಮನಿದ್ದಾರೆ. ನೀವು ಅದ್ಹೇಗೆ ಮಾತನಾಡಲು ಅವಕಾಶ ಕೊಡುತ್ತೀರಿ ಎಂದು ಸಭಾಪತಿಗಳನ್ನು ಪ್ರಶ್ನಿಸುತ್ತಿದ್ದಂತೆ ಸದನದಲ್ಲಿ ಮತ್ತೆ ಗದ್ದಲ ಉಂಟಾಯಿತು. ಬಳಿಕ ಸಭಾಪತಿ ಸದನವನ್ನು ಕೆಲಕಾಲ ಮುಂದೂಡಿದರು.
eesanje/url_46_237_5.txt ADDED
@@ -0,0 +1,4 @@
 
 
 
 
 
1
+ ಸಹಿ ಹಾಕಲು 3 ಲಕ್ಷ ಲಂಚ ಕೇಳಿದ್ದ ಮುಖ್ಯ ಶಿಕ್ಷಕ ಲೋಕಾಯುಕ್ತ ಬಲೆ
2
+ ಬೀದರ್,ಫೆ.15-ನಿವೃತ್ತರಾದ ಶಿಕ್ಷಕಿಗೆ ನಿವೃತ್ತಿ ಸೌಲಭ್ಯ ಪಡೆಯುವ ಕಡತಕ್ಕೆ ಸಹಿ ಹಾಕಲು 3 ಲಕ್ಷ ಲಂಚ ಕೇಳಿದ್ದ ಇಲ್ಲಿನ ಶ್ರೀ ವಿವೇಕಾನಂದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಜ್ಞಾನ ವಿಷಯದ ಸಹಾಯಕ ಶಕ್ಷಕಿಯಾಗಿದ್ದ ಶಶಿಕಲಾ ಅವರು ಇತ್ತೀಚೆಗೆ ಸೇವಾ ನಿವೃತ್ತಿ ಹೊಂದಿದ್ದರು.ಈ ಸಂಬಂಧ ನಿವೃತ್ತಿ ಸೌಲಭ್ಯ ಪಡೆಯುವ ಕಡತಕ್ಕೆ ಸಹಿ ಹಾಕಲು ಶಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬ್ಳೆ (58) 3 ಲಕ್ಷ ಲಂಚ ಬೇಡಿಕೆ ಇಟ್ಟು ಒತ್ತಾಯಿಸಿದ್ದರು.
3
+ ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ : ಅಡ್ಡ ಮತದಾನ ಭೀತಿ
4
+ ಈ ಬಗ್ಗೆ ಶಶಿಕಲಾ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು ಅದರಂತೆ ಪ್ರಕರಣ ದಾಖಲಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಇನ್ಸ್‍ಪೆಕ್ಟರ್ ಬಾಬ ಸಾಹೇಬ್ ಪಾಟೀಲ್ ಮತ್ತವರ ತಂಡ ಮುಖ್ಯ ಶಿಕ್ಷಕ ತುಕಾರಾಂ ಕಾಂಬ್ಳೆ 50 ಸಾವಿರ ನಗದು ಹಣ,1 ಲಕ್ಷರೂನ ಚೆಕ್ ಪಡೆಯುವಾಗ ರೆಡ್‍ಹ್ಯಾಂಡ್‍ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿ ಶಿಕ್ಷಕನನ್ನು ಬಂ„ಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ
eesanje/url_46_237_6.txt ADDED
@@ -0,0 +1,5 @@
 
 
 
 
 
 
1
+ ಬಿಜೆಪಿ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಕಣಕ್ಕೆ : ಹೆಚ್ಡಿಕೆ
2
+ ಬೆಂಗಳೂರು,ಫೆ.15- ನಮ್ಮ ಪಕ್ಷದ ಮತಗಳು ನಷ್ಟವಾಗಬಾರದು ಎಂಬ ಕಾರಣಕ್ಕೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯನಾಯಕರ ಸಲಹೆ ಮೇರೆಗೆ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ನಮಗೆ ಗೆಲುವಿಗೆ ಅಗತ್ಯವಿರುವ ಮತಗಳ ಕೊರತೆಯಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ಹೇಳಿದರು.
4
+ : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು
5
+ ನಮಗೆ ಸಂಖ್ಯಾಬಲದ ಕೊರತೆ ಇರುವುದು ನಿಜ. ಚುನಾವಣೆಯಲ್ಲಿ ಯಾವ ನಿರ್ಧಾರ ಆಗಲಿದೆಯೋ ಕಾದು ನೋಡೋಣ. ಬಿಜೆಪಿಯ ಹೆಚ್ಚುವರಿ ಮತಗಳು ನಮಗೆ ದೊರೆಯಲಿವೆ. ಹೀಗಾಗಿ ಬಿಜೆಪಿ-ಜೆಡಿಎಸ್ ವತಿಯಿಂದ 2ನೇ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಿದ್ದೇವೆ ಎಂದು ಅವರು ತಿಳಿಸಿದರು.
eesanje/url_46_237_7.txt ADDED
@@ -0,0 +1,5 @@
 
 
 
 
 
 
1
+ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರಕ್ಕೆ ನಾಳೆ ಮತದಾನ
2
+ ಬೆಂಗಳೂರು,ಫೆ.15- ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚುನಾವಣಾ ಸಿಬ್ಬಂದಿ ಇಂದು ಮಧ್ಯಾಹ್ನ ತಮ್ಮ ತಮ್ಮ ಮತಗಟ್ಟೆಗಳಿಗೆ ಮತಪೆಟ್ಟಿಗೆ, ಮತಪತ್ರ ಮೊದಲಾದ ಚುನಾವಣಾ ಸಾಮಗ್ರಿಗಳೊಂದಿಗೆ ತೆರಳಿದರು. ಮತದಾನವು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಅನುಕೂಲವಾಗುವಂತೆ ಪೊಲೀಸ್ ಬಿಗಿಭದ್ರತೆಯನ್ನೂ ಸಹ ಒದಗಿಸಲಾಗಿದೆ.
3
+ ನಾಳೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಚುನಾವಣಾ ಕಣದಲ್ಲಿ ಕಾಂಗ್ರೆಸ್‍ನಿಂದ ಮಾಜಿ ಉಪ ಸಭಾಪತಿ ಪುಟ್ಟಣ್ಣ, ಎನ್‍ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ ಸೇರಿದಂತೆ 9 ಅಭ್ಯರ್ಥಿಗಳಿದ್ದಾರೆ. ಪ್ರಾಶಸ್ತ್ಯದ ಮತವನ್ನು ಶಿಕ್ಷಕರು ಚಲಾಯಿಸಬೇಕಿದೆ. ಫೆ.20 ರಂದು ಮತ ಎಣಿಕೆ ಆರಂಭಗೊಳ್ಳಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಸೇರಿದ ನೋಂದಾಯಿತ ಶಿಕ್ಷಕರು ಮತದಾರರಾಗಿದ್ದಾರೆ. ಈ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 43 ಮತಗಟ್ಟೆಗಳನ್ನು ತೆರೆಯಲಾಗಿದೆ.
4
+ : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು
5
+ ಈ ಉಪ ಚುನಾವಣೆ ನಡೆಯುವ 3 ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಅರ್ಹ ಶಿಕ್ಷಕ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ನಾಳೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ರಾಜ್ಯಸರ್ಕಾರ ಆದೇಶಿಸಿದೆ.
eesanje/url_46_237_8.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ : ಅಡ್ಡ ಮತದಾನ ಭೀತಿ
2
+ ಬೆಂಗಳೂರು,ಫೆ.15- ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆ ಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕೊನೆ ಕ್ಷಣದಲ್ಲಿ ಕಣಕ್ಕಿಳಿಸಿರುವ ಹಿನ್ನಲೆ ಪ್ರಮುಖ ಮೂರು ರಾಜಕೀಯ ಪಕ್ಷಗಳಿಗೆ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಶಾಸಕರ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆ ದಟ್ಟವಾಗಿದೆ. ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಕಾಂಗ್ರೆಸ್‍ನಿಂದ ನಾಸೀರ್ ಹುಸೇನ್, ಜಿ.ಸಿ.ಚಂದ್ರ ಶೇಖರ್, ಅಜಯ್ ಮಕಾನ್, ಬಿಜೆಪಿಯಿಂದ ನಾರಾಯಣ ಬಾಂಡೆಗೆ ಮತ್ತು ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದರು.
3
+ ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಎಂ.ಕೆ.ವಿಶಾಲಾಕ್ಷಿಯವರಿಗೆ ಮೂರು ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಪಕ್ಷದ ಪ್ರಮುಖರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಫೆ.20ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ನಾಮಪತ್ರ ಸಲ್ಲಿಸಿರುವ ನಾಲ್ಕು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ ಫೆ.27ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆದು 5 ಗಂಟೆಯ ನಂತರ ಮತ ಎಣಿಕೆ ಪ್ರಾರಂಭವಾಗಿ ಫಲಿತಾಂಶ ಪ್ರಕಟಗೊಳ್ಳಲಿದೆ.
4
+ : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು
5
+ ಈಗಿನ ವಿಧಾನಸಭೆಯ ಚುನಾವಣೆಯ ಬಲಾಬಲದಲ್ಲಿ ಕಾಂಗ್ರೆಸ್ 3 ಹಾಗೂ ಬಿಜೆಪಿ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಿತ್ತು. ಕೊನೆ ಕ್ಷಣದಲ್ಲಿ ಜೆಡಿಎಸ್ ತನ್ನ ನಿಲುವು ಬದಲಿಸಿ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರಿಂದ ನಾಮಪತ್ರ ಸಲ್ಲಿಸಿರುವ ಕಾರಣ ಬಹುತೇಕ ಚುನಾವಣೆ ನಡೆಯುವುದು ಖಚಿತವಾಗಿದೆ. ರಾಜ್ಯಸಭೆಗೆ ಆಯ್ಕೆಯಾಗಬೇಕಾದರೆ ಓರ್ವ ಅಭ್ಯರ್ಥಿ ತಲಾ 45 ಮತಗಳನ್ನು ಪಡೆಯಬೇಕು. ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 135, ಬಿಜೆಪಿ 66, ಜೆಡಿಎಸ್ 19 ಹಾಗೂ ನಾಲ್ವರು ಪಕ್ಷೇತರ ಶಾಸಕರಿದ್ದಾರೆ.
6
+ ಈ ಹಿಂದೆ ಜೆಡಿಎಸ್‍ನ 7 ಮಂದಿ ಶಾಸಕರಿಂದ ಅಡ್ಡ ಮತದಾನ ನಡೆಸಿದ್ದ ಕಾಂಗ್ರೆಸ್‍ಗೆ ಪಾಠ ಕಲಿಸಲೇಬೇಕೆಂದೆ ಹಠಕ್ಕೆ ಬಿದ್ದಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ , ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರಿಂದ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಕಾವು ರಂಗೇರುವಂತೆ ಮಾಡಿದ್ದಾರೆ.
7
+ ಅಡ್ಡಮತದಾನದ ಭೀತಿ:ಒಂದು ವೇಳೆ ಮತದಾನ ನಡೆದರೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ ಮೂರು ಪಕ್ಷಗಳಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದೆ. ಬಿಜೆಪಿ ವಿಧಾನಸಭೆಯಲ್ಲಿ 66 ಸದಸ್ಯರನ್ನು ಹೊಂದಿದ್ದು, ತನ್ನ ಅಧಿಕೃತ ಅಭ್ಯರ್ಥಿ ನಾರಾಯಣಸಾ ಬಾಂಡೆಗೆ ಮೊದಲ ಪ್ರಾಶಸ್ತ್ಯದಲ್ಲಿ 46 ಮತಗಳನ್ನು ಹಾಕಿಸಿದರೆ ಹೆಚ್ಚುವರಿಯಾಗಿ ಉಳಿಯುವ 20 ಮತಗಳನ್ನು ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ��ಡಿಗೆ ಮತ ಹಾಕಲಿದೆ.
8
+ ಜೆಡಿಎಸ್ 19 ಸದಸ್ಯರನ್ನು ಹೊಂದಿದ್ದು, ಬಿಜೆಪಿಯ ಹೆಚ್ಚುವರಿ 20 ಮತಗಳು ಸೇರಿದರೆ 39 ಮತಗಳು ಕುಪೇಂದ್ರ ರೆಡ್ಡಿಗೆ ಬರಲಿದೆ. ಪಕ್ಷೇತರ ಶಾಸಕರಾದ ಜನಾರ್ಧನ ರೆಡ್ಡಿ(ಗಂಗಾವತಿ), ಲತಾ ಮಲ್ಲಿಕಾರ್ಜುನ (ಹರಪ್ಪನಹಳ್ಳಿ), ಪುಟ್ಟಸ್ವಾಮಿ ಗೌಡ(ಗೌರಿಬಿದನೂರು) ಹಾಗೂ ದರ್ಶನ್ ಪುಟ್ಟಣ್ಣಯ್ಯ(ಮೇಲುಕೋಟೆ) ಇವರಲ್ಲಿ ಎಷ್ಟು ಮಂದಿ ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸುತ್ತಾರೆ ಎಂಬುದರ ಮೇಲೆ ಕುಪೇಂದ್ರ ರೆಡ್ಡಿಯವರ ಸೋಲು ಗೆಲುವು ನಿಶ್ಚಿತವಾಗುತ್ತದೆ.
9
+ ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ
10
+ ಒಂದು ವೇಳೆ ನಾಲ್ವರು ಪಕ್ಷೇತರ ಶಾಸಕರು ಜೆಡಿಎಸ್‍ಗೆ ಮತ ಚಲಾಯಿಸಿದರೆ ಕುಪೇಂದ್ರ ರೆಡ್ಡಿಯ ಗೆಲುವಿಗೆ ಮೂರು ಮತಗಳು ಬೇಕಾಗುತ್ತದೆ. ಕಾಂಗ್ರೆಸ್‍ನಲ್ಲಿ ಅಸಮಾಧಾನಗೊಂಡಿರುವ ಶಾಸಕರು ಏನಾದರೂ ಕೊನೆ ಕ್ಷಣದಲ್ಲಿ ಲಕ್ಷ್ಮಿಗೆ ತಲೆಬಾಗಿ ರೆಡ್ಡಿಗೆ ಜೈ ಎಂದರೆ ಕಾಂಗ್ರೆಸ್ ಅಕೃತ ಅಭ್ಯರ್ಥಿಗೆ ಸೋಲು ಕಟ್ಟಿಟ್ಟ ಬುತ್ತಿ.ರಾಜ್ಯಸಭೆ ಚುನಾವಣೆಯಲ್ಲೂ ಈ ಹಿಂದೆ ಅಡ್ಡ ಮತದಾನ ನಡೆದು ಹೈಡ್ರಾಮ ನಡೆದ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಮೂರು ಪಕ್ಷಗಳಿಗೆ ಕುದುರೆ ವ್ಯಾಪಾರ, ಅಡ್ಡ ಮತದಾನದ ಭಯ ಆರಂಭವಾಗಿದೆ.ಬಿಜೆಪಿಯ ಇಬ್ಬರು, ಜೆಡಿಎಸ್‍ನ ಓರ್ವ ಶಾಸಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಏಕೆಂದರೆ ಈ ಮೂವರು ಶಾಸಕರು ಕಾಂಗ್ರೆಸ್ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ.
11
+ 224 ಶಾಸಕರು ಓಪನ್ ಬ್ಯಾಲೆಟ್ ಮೂಲಕ ಮತ ಚಲಾಯಿಸಬೇಕಾಗುತ್ತದೆ. ಓಪನ್ ಬ್ಯಾಲೆಟ್‍ನಲ್ಲಿ ನಡೆಯುವ ಮತದಾನವಾಗಿರುವುದರಿಂದ ಪಕ್ಷಗಳು ನೇಮಿಸುವ ಏಜೆಂಟರುಗಳಿಗೆ ಶಾಸಕರು ಮತದಾನಕ್ಕೂ ಮುನ್ನ ತಾವು ಯಾವ ಅಭ್ಯರ್ಥಿಗೆ ಮತ ಹಾಕುತ್ತಿದ್ದೇವೆ ಎಂಬುದನ್ನು ತೋರಿಸಿ ನಂತರವೇ ಮತ ಹಾಕಬೇಕು. ಒಂದು ವೇಳೆ ಏಜೆಂಟರಿಗೆ ತೋರಿಸದೆ ಹಾಕಿದ್ದಲ್ಲಿ ಅಸಿಂಧುಗೊಳ್ಳುವ ಸಾಧ್ಯತೆ ಇದೆ.
12
+ ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರಿಗೆ ವಿಪ್ ಅನ್ವಯವಾಗುವುದಿಲ್ಲ. ಒಂದು ವೇಳೆ ಅಡ್ಡ ಮತದಾನ ಮಾಡಿದರೆ ಅದು ಏಜೆಂಟರಿಗೆ ಗೊತ್ತಾಗಲಿದ್ದು, ಅಂಥ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ವಿಧಾನಸಭೆಯ ಸಭಾಧ್ಯಕ್ಷರಿಗೆ ದೂರು ನೀಡಲು ಅವಕಾಶವಿರುತ್ತದೆ.ಈ ಹಿಂದೆಯೂ ಜೆಡಿಎಸ್‍ನಿಂದ ಗೆದ್ದಿದ್ದ ಏಳು ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಜೆಡಿಎಸ್ ಅಂದು ದೂರು ಕೊಟ್ಟಿತ್ತಾದರೂ ವಿಧಾನಸಭಾಧ್ಯಕ್ಷರು ಯಾವುದೇ ಕಾನೂನು ಕ್ರಮ ಜರುಗಿಸಿರಲಿಲ್ಲ.
13
+ ಅಮೆರಿಕದಲ್ಲಿ ಭಾರತೀಯ ಸೇನಾ ಮುಖ್ಯಸ್ಥ
14
+ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಲತಾ ಮಲ್ಲಿಕಾರ್ಜುನ್, ದರ್ಶನ್ ಪುಟ್ಟಣ್ಣಯ್ಯ ಕೈ ಅಭ್ಯರ್ಥಿಗೆ ಮತ ಚಲಾಯಿಸಿದರೆ ಕುಪೇಂದ್ರ ರೆಡ್ಡಿ ಇನ್ನು ಹೆಚ್ಚುವರಿಯಾಗಿ ಆರು ಮತಗಳನ್ನು ಪಡೆಯಬೇಕಾಗುತ್ತದೆ. ಒಂದು ವೇಳೆ ಜಾತಿಯ ಕಾರಣಕ್ಕಾಗಿ ���ನಾರ್ಧನ ರೆಡ್ಡಿ ಹಾಗೂ ದಿವಂಗತ ಎಂ.ಪಿ.ಪ್ರಕಾಶ್ ಪುತ್ರಿ ಲತಾ ಮಲ್ಲಿಕಾರ್ಜುನ್ ಜೆಡಿಎಸ್ ಕೈ ಹಿಡಿದರೆ ಕಾಂಗ್ರೆಸ್‍ನಲ್ಲೂ ಅಸಮಾಧಾನಗೊಂಡಿರುವ ಶಾಸಕರು ಅಡ್ಡ ಮತದಾನ ಮಾಡಿದರೂ ಅಚ್ಚರಿ ಇಲ್ಲ.
15
+ ಇದೀಗ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದೇ ಎಲ್ಲ ಪಕ್ಷದವರಿಗೂ ತಲೆನೋವಾಗಿ ಪರಿಣಮಿಸಿದೆ. ಮೂಲಗಳ ಪ್ರಕಾರ ಚುನಾವಣೆ ನಡೆದಿದ್ದೇ ಆದಲ್ಲಿ ಕುದುರೆ ವ್ಯಾಪಾರವನ್ನು ತಪ್ಪಿಸಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ರೆಸಾರ್ಟ್‍ನತ್ತ ಹೊರಡಬಹುದು.
16
+ ವಿಧಾನಸಭೆಯ ಬಲಾಬಲಒಟ್ಟು ಸಂಖ್ಯೆ – 224ಕಾಂಗ್ರೆಸ್ – 135ಬಿಜೆಪಿ – 66ಜೆಡಿಎಸ್ – 19ಪಕ್ಷೇತರ – 4
eesanje/url_46_237_9.txt ADDED
@@ -0,0 +1,8 @@
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಏನನ್ನು ನಿರೀಕ್ಷಿಸಬಹುದು..?
2
+ ಬೆಂಗಳೂರು, ಫೆ.15- ಮುಖ್ಯ ಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ 15ನೇ ಬಜೆಟ್ ಮಂಡಿಸುತ್ತಿದ್ದು, ಕೃಷಿ, ಕಂದಾಯ, ಗ್ರಾಮೀಣಾಭಿವೃದ್ಧಿ, ಜಲಸಂಪನ್ಮೂಲ ಮತ್ತು ಮಹಿಳಾ- ಮಕ್ಕಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಈ ಹಿಂದಿನ ಬಜೆಟ್‍ಗಿಂತಲೂ ಶೇ. 15ಕ್ಕಿಂತಲೂ ಹೆಚ್ಚಿನದಾಗಿ ಆಯವ್ಯಯ ಗಾತ್ರ ಹಿಗ್ಗುವ ಸಾಧ್ಯತೆಯಿದ್ದು, ಕೃಷಿಕರ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪಂಚಖಾತ್ರಿ ಯೋಜನೆಗಳಿಗೆ ವೆಚ್ಚವನ್ನು ಬಜೆಟ್‍ನಲ್ಲಿ ಕರಾರುವಕ್ಕಾಗಿ ಮೀಸಲಿರಿಸಲಾಗುತ್ತಿದೆ.
3
+ ಲೋಕ ಸಭಾ ಚುನಾವಣೆ ನಂತರ ಪಂಚಖಾತ್ರಿಗಳು ಸ್ಥಗಿತಗೊಳ್ಳಲಿವೆ ಎಂಬ ಬಿಜೆಪಿಯ ಅಪಪ್ರಚಾರಕ್ಕೆ ಬಜೆಟ್‍ನಲ್ಲಿ ಅನುದಾನ ಮೀಸಲಿಡುವ ಮೂಲಕ ಸಿಎಂ ಪ್ರತ್ಯುತ್ತರಿಸಲಿದ್ದಾರೆ. ಬರ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವುದು, ಸಂಪನ್ಮೂಲ ಕ್ರೂಢೀಕರಣಕ್ಕೆ ಒತ್ತು ನೀಡುವ ಸಾಧ್ಯತೆಯಿದೆ.
4
+ ಪ್ರಮುಖವಾಗಿ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಮಧ್ಯಂತರ ಶಿಫಾರಸ್ಸಿನ ಅನ್ವಯ ಶೇ. 7ರಿಂದ 8ರಷ್ಟು ವೇತನ ಪರಿಷ್ಕರಣೆ ಸಾಧ್ಯತೆಗಳಿವೆ. ಈ ಹಿಂದೆ ಮಧ್ಯಂತರ ವರದಿ ಆಧರಿಸಿ ಬಸವರಾಜ ಬೊಮ್ಮಾಯಿ ಸರ್ಕಾರಿ ಶೇ. 17ರಷ್ಟು ವೇತನ ಹೆಚ್ಚಳ ಮಾಡಿತ್ತು. ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರಿ ನೌಕರರು ಬೇಡಿಕೆ ಮಂಡಿಸಿದ್ದರು. ಈಗ ಶೇ. 10ರಷ್ಟು ಮಧ್ಯಂತರ ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ಶೇ. 7ರಿಂದ 8ರಷ್ಟು ಪರಿಗಣಿಸುವ ಸಾಧ್ಯತೆ ಇದೆ.
5
+ : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು
6
+ ಒಟ್ಟು ಬೇಡಿಕೆಯನುಸಾರ ಶೇ. 37ರಷ್ಟು ವೇತನ ಹೆಚ್ಚಳ ಮಾಡುವುದು ಕಷ್ಟ ಸಾಧ್ಯವಾಗಿದ್ದು, ಹಂತ- ಹಂತವಾಗಿ ಪರಿಷ್ಕರಣೆ ಮಾಡುವ ಪ್ರಯತ್ನವನ್ನು ಮುಖ್ಯಮಂತ್ರಿ ನಡೆಸುತ್ತಿದ್ದಾರೆಂದು ಹೇಳಲಾಗಿದೆ. ಈ ನಡುವೆ ಜಲಸಂಪನ್ಮೂಲ ಇಲಾಖೆಗೂ ಆದ್ಯತೆ ನೀಡಬೇಕಿದ್ದು, ಕೆರೆಗಳನ್ನು ತುಂಬಿಸಲು 900 ಕೋಟಿ ರೂ.ಗಳ ಯೋಜನೆ ಸಿದ್ದಗೊಂಡಿದೆ.
7
+ ಮೇಕೆದಾಟು, ಭದ್ರಾಮೇಲ್ದಂಡೆ, ಕಳಸಬಂಡೂರಿ ಯೋಜನೆಗಳಿಗೆ ಕೇಂದ್ರದ ಪೂರ್ವಾನುಮತಿ ಪಡೆದುಕೊಳ್ಳುವ ಷರತ್ತಿನೊಂದಿಗೆ ಅನುದಾನ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಜೊತೆಯಲ್ಲಿ ಕೆಲವೊಂದು ಏತ ನೀರಾವರಿ ಯೋಜನೆಗಳಿಗೂ ಸಿಎಂ ಆದ್ಯತೆ ನೀಡುತ್ತಿದ್ದಾರೆ.
8
+ ಹಿಂದಿನ ಬಜೆಟ್‍ನಲ್ಲಿ ಬಂಡವಾಳ ವೆಚ್ಚವನ್ನು ಮೀಸಲಿಡಲಾಗಿತ್ತು. ಪ್ರಸ್ತುತ ಪಂಚಖಾತ್ರಿಗಳ ಸವಾಲಿನ ನಡುವೆಯೂ ಬಂಡವಾಳವನ್ನು ಶೇ. 10ರಿಂದ 12ರಷ್ಟು ಕ್ರೂಢೀಕರಿಸಲು ಮುಖ್ಯಮಂತ್ರಿ ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚಿನ ತೆರಿಗೆ ಇಲ್ಲದೆ ಸರ್ವಜನರನ್ನು ಸ್ಪರ್ಶಿಸುವ ಮತ್ತು ಸಮಾಧಾನಗೊಳಿಸುವ ಪ್ರಯತ್ನ ಮಾಡಿದ್ದು, ಇದಕ್ಕಾಗಿ ರಾಜ್ಯದ ಸಂಪನ್ಮೂ�� ಕ್ರೂಢೀಕರಣ ಕೇಂದ್ರದ ಅನುದಾನದ ಜೊತೆಗೆ ಸಾಲದ ಮೊರೆ ಹೋಗುವುದು ಅನಿವಾರ್ಯ ಎಂದು ಮೂಲಗಳು ತಿಳಿಸಿವೆ.
eesanje/url_46_238_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಂಗಳೂರು : ಆತಂಕ ಸೃಷ್ಟಿಸಿದ್ದ ಸ್ಕ್ರಾಪ್ ಎಟಿಎಂ ಬಾಕ್ಸ್
2
+ ಬೆಂಗಳೂರು, ಫೆ.14- ಮಿನರ್ವ ಸರ್ಕಲ್ ಬಳಿಯ ಕೋಟಕ್ ಮಹೀಂದ್ರ ಬ್ಯಾಂಕ್ ಎಟಿಎಂ ನ ಸಮೀಪದಲ್ಲಿ ಎರಡು ಸ್ಕ್ರಾಪ್ ಎಟಿಎಂ ಬಾಕ್ಸ್‍ಗಳನ್ನು ಕಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕಲಾಸಿಪಾಳ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಮಿನರ್ವ ಸರ್ಕಲ್ ಬಳಿ ಕೋಟಕ್ ಮಹೀಂದ್ರ ಬ್ಯಾಂಕ್ ಎಟಿಎಂ ಇದೆ. ಇದರ 10 ಅಡಿ ದೂರದಲ್ಲಿ ಚಿಂದಿ ಆಯುವ ವ್ಯಕ್ತಿಯೊಬ್ಬ ಎರಡು ಸ್ಕ್ರಾಪ್ ಎಟಿಎಂ ಬಾಕ್ಸ್‍ಗಳನ್ನು ಇಟ್ಟು ಹೋಗಿದ್ದಾನೆ.
3
+ ಕೆಲ ಸಮಯದ ಬಳಿಕ ಎಟಿಎಂ ಸೆಕ್ಯೂರಿಟಿ ಗಾರ್ಡ್ ಗಮನಿಸಿ ಸರ್ಕಲ್ ಬಳಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರಿಗೆ ತಿಳಿಸಿದ್ದಾರೆ. ಸಂಚಾರಿ ಪೊಲೀಸರು ಕಲಾಸಿಪಾಳ್ಯ ಠಾಣೆ ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅವು ಎಟಿಎಂಗೆ ಹಣ ತುಂಬುವ ಸ್ಕ್ರಾಪ್ ಬಾಕ್ಸ್‍ಗಳು ಎಂಬುವುದು ಗೊತ್ತಾಗಿದೆ.
4
+ ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದೂ ದೇವಾಲಯದ ವಿಶೇಷತೆಗಳೇನು ಗೊತ್ತೇ..?
5
+ ಯಾವ ಕಾರಣಕ್ಕೆ ಈ ಬಾಕ್ಸ್‍ಗಳನ್ನು ಈ ಜಾಗದಲ್ಲಿ ಚಿಂದಿ ಆಯುವ ವ್ಯಕ್ತಿ ತಂದಿಟ್ಟು ಹೋಗಿದ್ದಾನೆಂಬುವುದು ನಿಗೂಢವಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
6
+ ಖಾಸಗಿ ಬಸ್ ಡಿಕ್ಕಿ ಅಕೌಂಟೆಂಟ್ ಸಾವುಬೆಂಗಳೂರು,ಫೆ.14-ಸ್ನೇಹಿತರಿಬ್ಬರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅಕೌಂಟೆಂಟ್ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಮೂಲತಃ ಕೇರಳದ ಆಶಿಸ್ ಜೀಜಾ (22)ಮೃತಪಟ್ಟವರು. ಈತ ಕನ್‍ಸ್ಟ್ರಕ್ಷನ್ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು.
7
+ ನಾರಾಯಣಪುರದಲ್ಲಿ ವಾಸವಾಗಿದ್ದ ಆಶಿಸ್ ಜೀಜಾ ಅವರು ರಾತ್ರಿ 8.15ರ ಸುಮಾರಿನಲ್ಲಿ ಸ್ನೇಹಿತನ ಜೊತೆ ಪಲ್ಸರ್ ಬೈಕ್‍ನಲ್ಲಿ ಬೆಂಗಳೂರು-ಬಳ್ಳಾರಿ ರಸ್ತೆ, ವಿದ್ಯಾನಗರ ಕ್ರಾಸ್ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
8
+ 100 ಎಕರೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ : ಕ್ರೀಡಾ ಸಚಿವ ಬಿ.ನಾಗೇಂದ್ರ
9
+ ಡಿಕ್ಕಿ ರಭಸಕ್ಕೆ ಇಬ್ಬರೂ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡಿದ್ದ ಹಿಂಬದಿ ಸವಾರ ಆಶಿಸ್‍ನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಪಲಿಸದೇ ಮೃತಪಟ್ಟಿದ್ದಾರೆ. ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸುದ್ದಿ ತಿಳಿದು ಚಿಕ್ಕಜಾಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_238_10.txt ADDED
@@ -0,0 +1,7 @@
 
 
 
 
 
 
 
 
1
+ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನ
2
+ ಬೆಂಗಳೂರು,ಫೆ.14- ಇತಿಹಾಸ ಪ್ರಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಅಭಿವೃದ್ದಿ ಪ್ರಾಧಿಕಾರವನ್ನು ರಚನೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿಧಾನಪರಿಷತ್‍ನಲ್ಲಿ ಪ್ರಕಟಿಸಿದರು. ಸದಸ್ಯ ಕಾಂಗ್ರೆಸ್‍ನ ಎಸ್.ರವಿ ಅವರ ಪರವಾಗಿ ಯು.ಬಿ.ವೆಂಕಟೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಘಾಟಿ ಸುಬ್ರಮಣ್ಯ ಅಭಿವೃದ್ದಿ ಪ್ರಾಧಿಕಾರವನ್ನು ಘೋಷಣೆ ಮಾಡುತ್ತೇವೆ.
3
+ ಈಗಾಗಲೇ ಸಚಿವ ಸಂಪುಟಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಸಂಪುಟದಲ್ಲಿ ಅನುಮೋದನೆ ನೀಡುವುದಷ್ಟೇ ಬಾಕಿ ಇದೆ ಎಂದು ತಿಳಿಸಿದರು. ಪ್ರಾಧಿಕಾರ ರಚನೆಯಾದರೆ ಇದರಲ್ಲಿ ಮುಖ್ಯಮಂತ್ರಿ, ಸಚಿವರು, ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು, ಐಎಎಸ್, ಕೆಎಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ವೃಂದದ ಅಧಿಕಾರಿಗಳು ಬರುತ್ತಾರೆ. ಈ ವ್ಯಾಪ್ತಿಯಡಿ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದರು.
4
+ ಪಾಕ್ ಪ್ರಧಾನಿಯಾಗಲಿದ್ದಾರೆ ಶೆಹಬಾಜ್ ಷರೀಪ್
5
+ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಪ್ರತಿ ವರ್ಷ ಕರ್ನಾಟಕದ ವಿವಿಧ ಭಾಗಗಳಿಂದ 60-70 ಲಕ್ಷ ಭಕ್ತರು ಆಗಮಿಸುತ್ತಾರೆ. ಪ್ರತಿ ವರ್ಷ ದೇವಸ್ಥಾನಕ್ಕೆ 8 ಕೋಟಿ ಆದಾಯ ಬರುತ್ತದೆ. ಇಲ್ಲಿ ರಸ್ತೆ ಅಗಲೀಕರಣ, ಶೌಚಾಲಯಗಳು, ವಸತಿ ಸೇರಿದಂತೆ ವಿವಿಧ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಅಗತ್ಯವಿದೆ. ಪ್ರಾಧಿಕಾರ ರಚನೆಯಾದರೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ. ಘಾಟಿ ಸುಬ್ರಮಣ್ಯದಲ್ಲಿ ಭಕ್ತರಿಗೆ ಅನೇಕ ಸಮಸ್ಯೆಗಳು ಎದುರಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
6
+ ಹಿಂದೆ ಪದ್ಮ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿದ್ದವು : ಉಪ ರಾಷ್ಟ್ರಪತಿ
7
+ ಮೊದಲ ಆದ್ಯತೆಯಾಗಿ ಸರತಿ ಸಾಲಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ವಾಹನ ನಿಲ್ದಾಣ, ವಸತಿ ಗೃಹಗಳು, ಶೌಚಾಲಯ, ಮುಡಿ ಭವನ, ದಾಸೋಹ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ. ಘಾಟಿ ಸುಬ್ರಹ್ಮಣ್ಯ ಮಾತ್ರವಲ್ಲದೆ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಯಾತ್ರಾ ಸ್ಥಳಗಳಲ್ಲಿ ಮೂಲಸೌಕರ್ಯ ಕಲ್ಪಿಸಿಕೊಡಬೇಕೆಂಬ ಬೇಡಿಕೆ ಬರುತ್ತಲೇ ಇದೆ. ಸವದತ್ತಿ ಎಲ್ಲಮ್ಮ ಸೇರಿದಂತೆ ಅನೇಕ ಕಡೆ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಆರ್ಥಿಕ ಇತಿಮಿತಿಯೊಳಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
eesanje/url_46_238_11.txt ADDED
@@ -0,0 +1,8 @@
 
 
 
 
 
 
 
 
 
1
+ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ
2
+ ಬೆಂಗಳೂರು, ಫೆ.14- ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪದ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿತು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಶ್ನೋತ್ತರವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಆಗ ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ನಿಲುವಳಿ ಸೂಚನೆ ನೋಟಿಸ್ ನೀಡಿದ್ದು, ಅದರ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.
3
+ ನಿನ್ನೆ ಕೂಡ ಇದೇ ವಿಚಾರದ ಬಗ್ಗೆ ನೋಟಿಸ್ ನೀಡಿದ್ದರೂ ಅವಕಾಶ ಸಿಗಲಿಲ್ಲ. ಹಾಗಾಗಿ ಇಂದು ನೋಟಿಸ್ ನೀಡಲಾಗಿದೆ ಎಂದರು. ಆಗ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರವನ್ನು ನಿಯಮಾನುಸಾರ ನಿಲುವಳಿ ಸೂಚನೆಯಲ್ಲಿ ಚರ್ಚಿಸಲು ಅವಕಾಶವಿಲ್ಲ ಎಂದು ಆಕ್ಷೇಪಿಸಿದರಲ್ಲದೆ ಬೇರೆ ರೂಪದಲ್ಲಿ ಚರ್ಚಿಸಲು ತಮ್ಮ ತಕರಾರು ಇಲ್ಲ ಎಂದು ಹೇಳಿದರು.
4
+ ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ
5
+ ಈ ಹಂತದಲ್ಲಿ ಅಶೋಕ್ ಅವರ ಬೆಂಬಲಕ್ಕೆ ನಿಂತ ಬಿಜೆಪಿಯ ಹಿರಿಯ ಸದಸ್ಯರಾದ ಸುರೇಶ್ ಕುಮಾರ್, ಸುನೀಲ್ ಕುಮಾರ್ ಹಾಗೂ ಸಿ.ಸಿ.ಪಾಟೀಲ್ ಅವರು ನಿಲುವಳಿ ಸೂಚನೆಯಡಿ ಹತ್ತಾರು ಬಾರಿ ಕಾನೂನು ಮತ್ತು ಸುವ್ಯವಸ್ಥೆ ವಿಚಾರ ಸದನದಲ್ಲಿ ಚರ್ಚೆಯಾಗಿದೆ. ನಮಗೂ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಎರಡೂ ಕಡೆಯ ಅಭಿಪ್ರಾಯವನ್ನು ಆಲಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ವಿಚಾರ ನಿಲುವಳಿ ಸೂಚನೆಯಡಿ ಬರುವುದಿಲ್ಲ ಎಂದು ಸಭಾಧ್ಯಕ್ಷರು ಪ್ರಕಟಿಸಿದರು.
6
+ ಈ ವಿಚಾರವನ್ನು ನಿಯಮ 69ರಡಿ ಚರ್ಚೆಗೆ ಅನುವು ಮಾಡಿಕೊಡಲಾಗುವುದು. ವಿರೋಧ ಪಕ್ಷದ ನಾಯಕರು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ಸಂದರ್ಭದಲ್ಲಿ ಮಾತನಾಡಬಹುದು. ಸಮಯ ಅಭಾವವಿರುವುದರಿಂದ ಸಹಕರಿಸಬೇಕು ಎಂದು ಹೇಳಿದರು.
7
+ ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು
8
+ ಅದಕ್ಕೆ ಸಮ್ಮತಿಸಿದ ಅಶೋಕ್ ಅವರು ಕಾನೂನು ಮತ್ತು ಸುವ್ಯವಸ್ಥೆ ವಿಚಾರದ ಬಗ್ಗೆ ಗೃಹ ಸಚಿವರು ಪ್ರತ್ಯೇಕ ಉತ್ತರ ನೀಡಬೇಕು ಎಂದಾಗ ಪರಮೇಶ್ವರ್ ಅವರು ಸಮ್ಮತಿ ಸೂಚಿಸಿದರು.
eesanje/url_46_238_12.txt ADDED
@@ -0,0 +1,8 @@
 
 
 
 
 
 
 
 
 
1
+ ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ
2
+ ಬೆಂಗಳೂರು,ಫೆ.14- ಕೇಂದ್ರದಿಂದ ತೆರಿಗೆ ಪಾಲಿನಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಜನತಾ ನ್ಯಾಯಾಲಯದಲ್ಲಿ ಪ್ರಶ್ನಿಸಲು ಮುಂದಾಗಿರುವ ಕಾಂಗ್ರೆಸ್ ಇದಕ್ಕಾಗಿ ಸಾಮಾಜಿಕ ಜಾಲತಾಣಗಳ ಅಭಿಯಾನವನ್ನು ತೀವ್ರಗೊಳಿಸಲು ಮುಂದಾಗಿದೆ. ನನ್ನ ತೆರಿಗೆ ನನ್ನ ಹಕ್ಕು ಘೋಷಣೆಗೆ ಬಿಜೆಪಿ ನಾನಾ ರೀತಿಯ ವ್ಯಾಖ್ಯಾನ ಮಾಡಿದೆ. ರಾಜ್ಯಸರ್ಕಾರದಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆದ ವೇಳೆ ಸಂಸತ್‍ನಲ್ಲಿ ಬಿಜೆಪಿಯ ಸಂಸದರು ಕೆಂಡಾಮಂಡಲದ ಟೀಕೆಗಳನ್ನು ಮಾಡಿ ತಮ್ಮ ಅಸಹನೆಯನ್ನು ಹೊರಹಾಕಿದ್ದಾರೆ.
3
+ ಇದೇ ವೇಳೆ ಕಾಂಗ್ರೆಸ್ ಸದಸ್ಯರಿಗೆ ಮಾತನಾಡಲು ಅವಕಾಶ ನಿರಾಕರಿಸಿ ಏಕಪಕ್ಷೀಯ ಅಭಿಪ್ರಾಯ ಗಟ್ಟಿಗೊಳ್ಳುವಂತೆ ಮಾಡುವ ಪ್ರಯತ್ನಗಳಾಗಿವೆ. ಅದಕ್ಕೆ ಎದುರೇಟು ನೀಡಲು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನನ್ನ ತೆರಿಗೆ ನನ್ನ ಹಕ್ಕು ಟ್ವೀಟರ್ ಸಂವಾದದಲ್ಲಿ ಭಾಗವಹಿಸಿ ನೆಟ್ಟಿಗರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ನನ್ನ ತೆರಿಗೆ ನನ್ನ ಹಕ್ಕು ಎಂಬುದು ದೇಶ ವಿಭಜನೆಯ ಪ್ರಯತ್ನ ಎಂದು ಬಿಜೆಪಿ ಟೀಕಿಸುತ್ತಿದೆ.
4
+ ಇದಕ್ಕೆ ಎದುರೇಟು ಎಂಬಂತೆ ಕಾಂಗ್ರೆಸ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಿಂದಾಗುತ್ತಿರುವ ತೆರಿಗೆ ಪಾಲಿನ ಅನ್ಯಾಯಗಳ ಬಗ್ಗೆ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಮುಂದಿಟ್ಟು ತಿರುಗೇಟು ನೀಡಲು ತಯಾರಿ ನಡೆಸಿದೆ. ರಾಜ್ಯದಿಂದ ಬಿಜೆಪಿಯ 25, ಜೆಡಿಎಸ್‍ನ 1 ಪಕ್ಷೇತರ ಒಬ್ಬರು ಸೇರಿ 27 ಸಂಸದರು ಕೇಂದ್ರದ ಆಡಳಿತಾರೂಢ ಸರ್ಕಾರಕ್ಕೆ ಬೆಂಬಲವಾಗಿದ್ದರು. ರಾಜ್ಯಕ್ಕಾದ ತೆರಿಗೆ ಅನ್ಯಾಯದ ಬಗ್ಗೆ ಧ್ವನಿಯೆತ್ತಲಿಲ್ಲ ಎಂಬುದನ್ನು ಗಟ್ಟಿಯಾಗಿ ಹೇಳಲು ಕಾಂಗ್ರೆಸ್ ನಿರ್ಧರಿಸಿದೆ.
5
+ ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ
6
+ ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯವರ ಹೆಸರು ಹೇಳಿಕೊಂಡು ಮತ ಪಡೆದ ಸಂಸದರು ಪಕ್ಷ ನಿಷ್ಠರಾಗಿದ್ದಾರೇ ಹೊರತು ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಒಂದು ದಿನವೂ ಬಾಯಿ ಬಿಡಲಿಲ್ಲ. ಈಗ ಮತ್ತೊಮ್ಮೆ ಮೋದಿ ಹೆಸರಿನಲ್ಲೇ ಮತ ಕೇಳಲು ಮುಂದಾಗಿದ್ದಾರೆ. ರಾಜ್ಯಕ್ಕೆ ಮೋದಿ ಭಕ್ತರು ಮಾತ್ರ ಬೇಕೋ ಅಥವಾ ನ್ಯಾಯ ಕೊಡಿಸುವ ಜನಪ್ರತಿನಿಧಿಗಳು ಬೇಕೋ ಎಂಬುದನ್ನು ಜನರು ನಿರ್ಧರಿಸಬೇಕು ಎಂದು ಕಾಂಗ್ರೆಸ್ ವ್ಯಾಖ್ಯಾನಿಸುತ್ತಿದೆ.
7
+ ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು
8
+ ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕ ಪ್ರಸಾರಾಂಧೋಲನ ನಡೆಸಲು ಸಿದ್ಧತೆ ಕೈಗೊಂಡಿದೆ. ಸಾಮಾಜಿಕ ಜಾಲಾತಾಣದ ಅಭಿಯಾನ ಸಂವಾದಗಳು ಜನರ ಪ್ರಶ್ನೆಗಳಿಗೆ ಮತ್ತು ಗೊಂದಲಗಳಿಗೆ ಸ್ಪಷ್ಟ ಉತ್ತರ ನೀಡುವ ಮೂಲಕ ನನ್ನ ತೆರಿಗೆ ನ��್ನ ಹಕ್ಕು ಅಭಿಯಾನವನ್ನು ರ್ನಿಧಿಷ್ಟ ಗುರಿಯೆಡೆಗೆ ಕೊಂಡೊಯ್ಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಣೆಗಾರಿಕೆ ಹೊತ್ತಿದ್ದಾರೆ. ಇಂದಿನ ಸಂವಾದದಲ್ಲಿ ರಾಜ್ಯಕ್ಕಾದ ಅನ್ಯಾಯದ ಬಗ್ಗೆ ಸವಿಸ್ತಾರವಾದ ಮತ್ತಷ್ಟು ಮಾಹಿತಿಗಳನ್ನು ಮುಖ್ಯಮಂತ್ರಿ ನೀಡಲಿದ್ದಾರೆ ಎಂದು ಹೇಳಲಾಗಿದೆ.
eesanje/url_46_238_2.txt ADDED
@@ -0,0 +1,6 @@
 
 
 
 
 
 
 
1
+ ಸಬ್ಸಿಡಿ ಕಡಿತದಿಂದ ಬೀದಿಗೆ ಬೀಳುತ್ತಿರುವ ಕೈಮಗ್ಗಗಳು : ಪುನರ್ ಪರಿಶೀಲನೆಗೆ ಕಾಸಿಯಾ ಮನವಿ
2
+ ಬೆಂಗಳೂರು,ಫೆ.14- ವಿದ್ಯುತ್ ಮಗ್ಗಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕಡಿತಗೊಳಿಸಿರುವುದನ್ನು ಪುನರ್ ಪರಿಶೀಲಿಸಬೇಕೆಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಸರ್ಕಾರಕ್ಕೆ ಮನವಿ ಮಾಡಿದೆ. ಈ ಹಿಂದೆ ವಿದ್ಯುತ್ ಮಗ್ಗಗಳಿಗೆ ಪ್ರತಿ ಯೂನಿಟ್‍ಗೆ 1.25 ರೂ.ಗಳಂತೆ ದರ ವಿಧಿಸಿ ವಿದ್ಯುತ್ ನೀಡಲಾಗುತ್ತಿತ್ತು ಆದರೆ ಇತ್ತೀಚೆಗೆ ಕಳೆದ ಅಕ್ಟೋಬರ್ 20, 2023ರಲ್ಲಿ ವಿದ್ಯುತ್ ಬಳಕೆಯ ಮಿತಿಯನ್ನು ಹೇರಿ 500 ಯುನಿಟ್‍ಗೆ ನಿಗದಿಪಡಿಸಿ ಆದೇಶಿಸಲಾಗಿದೆ. ಇದರಿಂದ ನೇಕಾರರಿಗೆ ಮತ್ತೆ ಆರ್ಥಿಕ ಹೊರೆ ಬೀಳುತ್ತಿದೆ.
3
+ ಹಿಂದೆ ಇದ್ದಂತೆ ಸಬ್ಸಿಡಿ ದರದಲ್ಲಿ ಯಾವುದೇ ಮಿತಿಯಿಲ್ಲದೆ ವಿದ್ಯುತ್ ಪೂರೈಕೆ ಮಾಡಬೇಕು. 10.1 ರಿಂದ 20 ಹೆಚ್‍ಪಿ ವರೆಗೆ ನೀಡುತ್ತಿದ್ದ ಸವಲತ್ತುಗಳನ್ನು ಮುಂದುವರಿಸಬೇಕೆಂದು ಮನವಿ ಮಾಡಲಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ನೇಕಾರರು ಮತ್ತೆ ಸಮಸ್ಯೆಗೆ ಸಿಲುಕುವ ಸಾಧ್ಯತೆಯಿರುವುದರಿಂದ ಸರ್ಕಾರ ಮಾನವೀಯ ಆಧಾರದ ಮೇಲೆ ಯಾವುದೇ ಮಿತಿಯಿಲ್ಲದೆ ಪ್ರತಿ ಯುನಿಟ್‍ಗೆ 1.25 ರೂ.ಗಳಂತೆ ವಿದ್ಯುತ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ.
4
+ ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದೂ ದೇವಾಲಯದ ವಿಶೇಷತೆಗಳೇನು ಗೊತ್ತೇ..?
5
+ ಈಗಾಗಲೇ ಅನೇಕ ಕೈಮಗ್ಗಗಳು, ವಿದ್ಯುತ್ ಮಗ್ಗಗಳಾಗಿ ಪರಿವರ್ತನೆಗೊಂಡಿದೆ. ಇದರಲ್ಲಿ ಸಾವಿರಾರು ಮಂದಿ ಕೆಲಸ ಮಾಡುತ್ತಿದ್ದಾರೆ. ವಿದ್ಯುತ್ ಹೊರೆ ಹೆಚ್ಚಿದರೆ ಅವರು ಬೀದಿಗೆ ಬೀಳುವ ಪರಿಸ್ಥಿತಿ ಉದ್ಭವಾಗುತ್ತದೆ. ಗುಣಮಟ್ಟದ ನೇಯ್ದ ಬಟ್ಟೆಗಳನ್ನು ನೀಡಿ ಇಡೀ ದೇಶಕ್ಕೆ ಹಿರಿಮೆಯನ್ನು ತಂದಿರುವ ಕರ್ನಾಟಕದ ನೇಕಾರರನ್ನು ಸಂಕಷ್ಟದ ಪರಿಸ್ಥಿತಿಯಲ್ಲಿ ಕೈ ಹಿಡಿಯುವ ಜವಾಬ್ದಾರಿ ಸರ್ಕಾರದ್ದಾಗಿದೆ.
6
+ ಆದರೆ ನಮ್ಮ ಮನವಿಯನ್ನು ಯಾರೂ ಕೇಳುತ್ತಿಲ್ಲ ಎಂದು ಕೆಲ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಹೊರೆಯಿಂದಲೇ ಅನೇಕ ಕೈಮಗ್ಗಗಳು ನಶಿಸಿಹೋಗುತ್ತಿದೆ. ತಲತಲಾಂತರಗಳಿಂದ ಈ ಉದ್ಯಮಿಗಳನ್ನು ನಂಬಿಕೊಂಡು ಬಂದಿದ್ದ ಸುಮಾರು 20 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಪರಿಸ್ಥಿತಿ ಹದಗೆಡುತ್ತಿದೆ. ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯುತ್ ಮಗ್ಗಗಳು ಮುಚ್ಚುವ ಹಂತ ತಲುಪಿದೆ. ಸರ್ಕಾರ ಕೂಡಲೇ ಇವರ ನೆರವಿಗೆ ಬರಬೇಕು ಎಂದು ಉದ್ಯಮಿಗಳು ಕೂಡ ಮನವಿ ಮಾಡಿದ್ದಾರೆ.
eesanje/url_46_238_3.txt ADDED
@@ -0,0 +1,8 @@
 
 
 
 
 
 
 
 
 
1
+ ಕ್ರೈಂ ರಾಜಧಾನಿಯಾಗುತ್ತಿದೆ ಬೆಂಗಳೂರು : ಆರ್.ಅಶೋಕ್
2
+ ಬೆಂಗಳೂರು,ಫೆ.14- ಶಾಂತಿ ಮತ್ತು ಸುವ್ಯವಸ್ಥೆಗೆ ಹೆಸರಾಗಿದ್ದ ಕರ್ನಾಟಕ ಅಪರಾಧದ ನಾಡಾಗಿ ಕುಖ್ಯಾತಿ ಪಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ಆರೋಪಿಸಿದರು. ನಿಯಮ 69 ರಡಿ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ಎನ್ಸಿಆರ್‍ಬಿ ಪ್ರಕಾರ, ಅಪರಾಧಗಳ ಸಂಖ್ಯೆ ಶೇ.25 ರಿಂದ ಶೇ.30 ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷ 1,80,742 ಪ್ರಕರಣಗಳು ವರದಿಯಾಗಿವೆ. ನಮ್ಮ ಸರ್ಕಾರದ ಅವಧಿಗಿಂತ ಇದು ಶೇ.40 ರಷ್ಟು ಹೆಚ್ಚಾಗಿದೆ. ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.56 ರಷ್ಟು ಹೆಚ್ಚಾಗಿವೆ ಎಂದು ಅವರು ತಿಳಿಸಿದರು.
3
+ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಬೆಂಗಳೂರು ಕ್ರೈಂ ರಾಜಧಾನಿಯಾಗುತ್ತಿದೆ. ಸೈಬರ್ ಕ್ರೈಂನಲ್ಲಿ ಮೊದಲ ಸ್ಥಾನದಲ್ಲಿದೆ. ಒಂದೇ ವರ್ಷದಲ್ಲಿ 432 ಕೋಟಿ ರೂ. ಸೈಬರ್ ಕ್ರೈಂ ಮೂಲಕ ಲೂಟಿಯಾಗಿದೆ. ಬೆಂಗಳೂರು ಸುರಕ್ಷತಾ ನಗರ ಹೋಗಿ ಕ್ರೈಂ ಸಿಟಿಯಾಗಿ ಮಾರ್ಪಡುತ್ತಿದೆ. ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ. ಕೆಎಫ್‍ಡಿ, ಪಿಎಫ್‍ಐ ಮೇಲಿನ 1600 ಕೇಸುಗಳನ್ನು ಸರ್ಕಾರ ವಾಪಸ್ಸು ಪಡೆದಿದೆ. ಇದರಿಂದ ಅಂತವರಿಗೆ ಧೈರ್ಯ ಬಂದಾಂತಾಗಿದೆ. ಕೋಲಾರದಲ್ಲಿ ಸ್ಟೀಲ್‍ನಿಂದ ನಿರ್ಮಿಸಿದ 30 ಅಡಿ ಅಗಲ, 40 ಅಡಿ ಎತ್ತರದ ಮಚ್ಚು, ಲಾಂಗಿನಿಂದ ಮಾಡಿದ ಕಟೌಟ್ ಹಾಕಲಾಗಿದೆ. ಕಾಂಗ್ರೆಸ್ ಸಕ್ರಾರ ಅಧಿಕಾರಕ್ಕೆ ಬಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.
4
+ ಬಳ್ಳಾರಿಯಲ್ಲಿ 8 ಮಂದಿ ಶಂಕಿತ ಉಗ್ರರನ್ನು ಎನ್‍ಐಎ ಬಂಧಿಸಿದೆ. ಸಮಾಜದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಮಾಡಲಾಗುತ್ತಿತ್ತು. ಮಿನಾಜ್ ಅಲಿಯಾಸ್ ಮಹಮ್ಮದ್ ಸುಲೈಮಾನ್ ಎಂಬ ವ್ಯಕ್ತಿ ಕಿಂಗ್‍ಪಿನ್ ಆಗಿದ್ದು, ಅಮಾಯಕರಿಗೆ ಹಣ, ಉದ್ಯೋಗ, ಧರ್ಮದ ಆಮಿಷವೊಡ್ಡಿ ಅಪರಾಧ ಕೃತ್ಯಗಳ ಬಗ್ಗೆ ತರಬೇತಿ ನೀಡಲಾಗುತ್ತಿತ್ತು ಎಂಬ ವರದಿಯಾಗಿದೆ. ಶಿವಾಜಿನಗರ ಪುಲಕೇಶಿ ನಗರದಲ್ಲೂ ಕೂಡ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಇವರಿಗೆ ಹಣ ಎಲ್ಲಿಂದ ಬಂತು, ಯಾರು ಕಳುಹಿಸಿದರು ಎಂಬುದು ಗೊತ್ತಾಗುವುದಿಲ್ಲ.
5
+ ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆ, ನಾಮಪತ್ರ ಸಲ್ಲಿಕೆ
6
+ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಿತ್ರದುರ್ಗದ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸುವಾಗ ಹಲ್ಲೆ ನಡೆಸಲಾಗಿದೆ. ರಾಜ್ಯ ಗುಪ್ತಚರ ಇಲಾಖೆ ಸತ್ತಿದೆಯೋ? ಬದುಕಿದೆಯೋ ಅಥವಾ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆಯೋ ಗೊತ್ತಿಲ್ಲ. ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರತಿಭಟನೆ ಮಾಡುತ್ತಾರೆ. ಅದು ಪೊಲೀಸಿನವರಿಗೇ ಗೊತ್ತಾಗುವುದಿಲ್ಲ. ಪ್ರತಿಭಟನೆ ಮಾಡಿದವರ ಮೇಲೆ ಕ್ರಮವೂ ಆಗುವುದಿಲ್ಲ. ಪೊಲೀಸರು ನೈತಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದರು.
7
+ ಬೆಳಗಾವಿಯ���್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ ಕೋಲಾರ ಮತ್ತು ಬೆಂಗಳೂರಿನ ಆಂದ್ರಹಳ್ಳಿಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಶುಚಿಗೊಳಿಸಿದ ಪ್ರಕರಣವನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅಶೋಕ್, ಇದಕ್ಕೆ ಸರ್ಕಾರದ ಆಡಳಿತ ವೈಫಲ್ಯ ಕಾರಣ ಎಂದು ದೂರಿದರು.
8
+ ಚಿಂತಾಮಣಿಯಲ್ಲಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳು ಸರಿಯಾಗಿ ಊಟ ನೀಡಲಿಲ್ಲ ಎಂದು ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲಿನ ಕೋಪಕ್ಕ ಅಲ್ಲಿನ ವಾರ್ಡನ್ ಊಟದಲ್ಲಿ ಮಲ ಬೆರೆಸಿರುವುದು ಎಫ್‍ಎಸ್‍ಐಎಲ್ ವರದಿಯಲ್ಲಿ ಗೊತ್ತಾಗಿದೆ. ವರದಿ ಬಂದು ಮೂರು ತಿಂಗಳಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಾವೇರಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಟ್ ಅವರ ಮೇಲೆ ಹಲ್ಲೆ ಆಗಿತ್ತು. ಬೆಂಗಳೂರಿನಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ಬೆಂಕಿ ಹಾಕಲಾಗಿತ್ತು ಎಂಬುದು ಸೇರಿದಂತೆ ಹಲವು ಘಟನೆಗಳನ್ನು ಉಲ್ಲೇಖಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
eesanje/url_46_238_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರೈತರ ನೊಂದಣಿಯಲ್ಲಿ ಅವ್ಯವಹಾರ : ಒಂದು ವಾರ ಕೊಬ್ಬರಿ ಖರೀದಿ ಸ್ಥಗಿತ
2
+ ಬೆಂಗಳೂರು,ಫೆ.14- ಕೊಬ್ಬರಿ ಖರೀದಿಗೆ ರೈತರ ನೊಂದಣಿಯಲ್ಲಿ ಅವ್ಯವಹಾರಗಳಾಗಿರುವುದರಿಂದ ತಾತ್ಕಾಲಿಕ ವಾಗಿ ಒಂದು ವಾರ ಕಾಲ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಜೆಡಿಎಸ್‍ನ ಎಚ್.ಡಿ.ರೇವಣ್ಣ ಸೇರಿದಂತೆ ಪಕ್ಷಾತೀತ ವಾಗಿ ಬಹುತೇಕ ಶಾಸಕರು ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಚಾರ ಕುರಿತು ಇಂದು ಉತ್ತರ ನೀಡಿದ ಸಚಿವರು, ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಲೋಪಗಳು ಕಂಡುಬರುತ್ತಿವೆ.
3
+ ಇಲಾಖೆಯಿಂದ ಖರೀದಿಸಲಾಗಿದ್ದ ಕಂಪ್ಯೂಟರ್ ಬದಲಿಗೆ ಅಧಿಕಾರಿಗಳು ಮತ್ತು ಹೊರ ಗುತ್ತಿಗೆ ಸಿಬ್ಬಂದಿಗಳು ತಾವೇ ಬೇರೆ ಕಂಪ್ಯೂಟರ್ ಖರೀದಿಸಿ ಅದನ್ನು ರೈತರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇದು ವ್ಯಾಪಕ ವಾಗಿ ಕಂಡುಬರುತ್ತಿದೆ. ಬೇರೆ ಜಿಲ್ಲೆಯಿಂದ 3500 ರೈತರನ್ನು ಹಾಸನದಲ್ಲಿ ನೋಂದಾವಣಿ ಮಾಡಲಾಗಿದೆ. ಹೀಗಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ 9 ಮಂದಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುತ್ತಿದೆ. ನೋಂದಣಿ ಪ್ರಕ್ರಿಯೆ ಪರಿಷ್ಕರಣೆಗೊಳ ಪಡಿಸ ಲಾಗುತ್ತಿದ್ದು, ಆವರೆಗೆ ತಾತ್ಕಾಲಿಕ ವಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತ ಗೊಳಿಸಲಾಗುತ್ತಿದೆ ಎಂದು ಹೇಳಿದರು.
4
+ ಈ ಮೊದಲು ಕೇಂದ್ರ ಸರ್ಕಾರ 7 ತಿಂಗಳ ಅವಧಿವರೆಗೂ ಕೊಬ್ಬರಿ ಖರೀದಿಗೆ ಅವಕಾಶ ನೀಡಿತ್ತು. ಪ್ರಸ್ತುತ 3 ತಿಂಗಳಿನಂತೆ ಎರಡು ಅವಧಿಗೆ ಖರೀದಿಗೆ ಅವಕಾಶ ನೀಡಲಾಗಿದೆ. ಕಳೆದ ಬಾರಿ ಖರೀದಿಯಲ್ಲಿ ನಫೆಡ್ 200 ಕೋಟಿ ರೂ. ನಷ್ಟ ಅನುಭವಿಸಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
5
+ ಉಂಡೆ ಕೊಬ್ಬರಿಯನ್ನು ಶೇ.25ರಷ್ಟು ಖರೀದಿಸಲು ಅವಕಾಶವಿದೆ. ಆ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಹಾಗೆಯೇ ಹೋಳಾಗಿರುವ ವಿಲ್ಲಿಂಗ್ ಕೊಬ್ಬರಿಯನ್ನು ಖರೀದಿಸಲು ಅನುಮತಿ ನೀಡುವಂತೆಯೂ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.
6
+ ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆ, ನಾಮಪತ್ರ ಸಲ್ಲಿಕೆ
7
+ ನೋಂದಣಿ ಪ್ರಕ್ರಿಯೆಯಲ್ಲಿನ ಲೋಪವನ್ನು ಸರಿಪಡಿಸುವವರೆಗೂ ಸಹಕರಿಸುವಂತೆ ಸಚಿವರು ಮನವಿ ಮಾಡಿದರು. ಮುಂದುವರೆದ ಚರ್ಚೆಯಲ್ಲಿ ಶಾಸಕರಾದ ಸುರೇಶ್ ಗೌಡ, ಜನವರಿಯಿಂದಲೇ ಖರೀದಿ ಆರಂಭವಾಗಬೇಕಿತ್ತು. ಫೆ.1ರಿಂದ ಖರೀದಿಸುವುದಾಗಿ ನಫೇಡ್ ತಿಳಿಸಿತ್ತು. ಅದನ್ನು ನಂಬಿ ರೈತರು ಕೊಬ್ಬರಿಯನ್ನು ಸುಲಿದು ಸಜ್ಜುಗೊಂಡಿಸಿಟ್ಟುಕೊಂಡಿದ್ದಾರೆ. ಈಗ ಮತ್ತೆ ಒಂದು ವಾರ ಮುಂದೂಡಿದರೆ ರೈತರಿಗೆ ನಷ್ಟವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
8
+ ಕೇಂದ್ರ ಕೃಷ��� ಸಚಿವೆ ಶೋಭಾ ಕರಂದ್ಲಾಜೆ ರೈತರು ಬೆಳೆದ ಪೂರ್ತಿ ಕೊಬ್ಬರಿಯನ್ನು ಖರೀದಿಸುವುದಾಗಿ ಹೇಳಿದ್ದಾರೆ. ಅದರಂತೆ ಸರ್ಕಾರ ನಡೆದು ಕೊಳ್ಳಬೇಕೆಂದು ಒತ್ತಾಯಿಸಿದರು. ತಿಪಟೂರು ಕ್ಷೇತ್ರದ ಷಡಕ್ಷರಿ ಮಾತ ನಾಡಿ, 8 ದಿನದ ವಿಳಂಬದಿಂದ ಹೆಚ್ಚೇನು ಹಾನಿಯಾಗುವುದಿಲ್ಲ. ನೋಂದಣಿ ಪ್ರಕ್ರಿಯೆಯಲ್ಲಿ ವಿಳಬಂವಾಗಿದೆ. ಪರಿಷ್ಕರಣೆ ಬದಲಾಗಿ ರದ್ದು ಮಾಡಿ ಕೊಬ್ಬರಿ ಖರೀದಿ ಮತ್ತು ನೋಂದಣಿ ಯನ್ನು ಏಕಕಾಲಕ್ಕೆ ಆರಂಭಿಸಿ ಎಂದು ಒತ್ತಾಯಿಸಿದರು.
9
+ 100 ಎಕರೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ : ಕ್ರೀಡಾ ಸಚಿವ ಬಿ.ನಾಗೇಂದ್ರ
10
+ ಅರಸೀಕೆರೆ ಕ್ಷೇತ್ರದ ಶಿವಲಿಂಗೇಗೌಡ, ಎಂಟು ದಿನ ವಿಳಂಬ ಮಾಡುವುದು ಅನಗತ್ಯ. ತಡವಾದರೆ ಕೊಬ್ಬರಿ ಗುಣಮಟ್ಟ ಕುಂದುತ್ತದೆ. ಸಚಿವರು ಕೊಬ್ಬರಿ ಬೆಳೆಯುವ ಜಿಲ್ಲೆಗಳ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸಿದರೆ ಸಮಸ್ಯೆ ಬಗೆಹರಿಸಲು ವಿವರವಾದ ಚರ್ಚೆ ನಡೆಸಬಹುದು ಎಂದರು. ತುರುವೇಕೆರೆಯ ಎಂ.ಟಿ. ಕೃಷ್ಣಪ್ಪ ಮತ್ತು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು.
eesanje/url_46_238_5.txt ADDED
@@ -0,0 +1,6 @@
 
 
 
 
 
 
 
1
+ ಗೋಪಾಲಯ್ಯ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದ ಪದ್ಮರಾಜ್ ಅರೆಸ್ಟ್
2
+ ಬೆಂಗಳೂರು, ಫೆ.14- ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರಿಗೆ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾದ ನಂತರ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪದ್ಮರಾಜ್ ಅವರ ಮನೆ ಬಳಿ ತೆರಳಿ ನಂತರ ಅವರನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆತಂದು ಬಂಧಿಸಿ ವಿಚಾರಣೆ ಗೊಳಪಡಿಸಿದ್ದಾರೆ.
3
+ ಜೀವ ಬೆದರಿಕೆ ದೂರು:ವಿನಾಃ ಕಾರಣ ನನಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ಕೊಡುವಂತೆ ದಮಕಿ ಹಾಕಿ ಜೀವ ಬೆದರಿಕೆ ಹಾಕಿದ್ದಾರೆಂದು ಮಾಜಿ ಕಾಪೆರ್ರೇಟರ್ ಪದ್ಮರಾಜ್ ವಿರುದ್ಧ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
4
+ ರಾತ್ರಿ 11 ಗಂಟೆ ಸುಮಾರಿನಲ್ಲಿ ಬಸವೇಶ್ವರ ನಗರ ವಾರ್ಡ್‍ನ ಮಾಜಿ ಕಾರ್ಪೊರೇಟರ್ ಪದ್ಮರಾಜು ಅವರು ಮೊಬೈಲ್‍ನಿಂದ ನನಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಯಾವುದೇ ಕಾರಣವಿಲ್ಲದೆ ನನ್ನ ಕುಟುಂಬವನ್ನು ನಿರ್ನಾಮ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಪದ್ಮರಾಜು ಅವರ ಹಾಗೂ ನನ್ನ ನಡುವೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲದಿದ್ದರೂ ಸಹ ನನಗೆ ಕರೆ ಮಾಡಿ ಹಣವನ್ನು ನೀಡಬೇಕು. ಖರ್ಚಿಗೆ ಹಣ ನೀಡದೇ ಹೋದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ. ನನ್ನ ಕಡೆಯ ಹುಡುಗರನ್ನು ಕಳುಹಿಸಿ ಇಡೀ ಕುಟುಂಬವನ್ನು ಕೊಲೆ ಮಾಡಿಸುತ್ತೇನೆಂದು ಜೀವ ಬೆದರಿಕೆ ಹಾಕಿರುವುದಾಗಿ ಶಾಸಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
5
+ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ
6
+ ನನ್ನನ್ನು ನಿಂದಿಸಿ ಬೆದರಿಕೆ ಹಾಕಿ ನನಗೆ ಭಯಪಡಿಸಿದ್ದಾರೆ. ಮುಂದೆ ನನಗೆ ಹಾಗೂ ನನ್ನ ಕುಟುಂಬಕ್ಕೆ ಯಾವುದೇ ರೀತಿಯ ಹಾನಿ ಅಥವಾ ತೊಂದರೆ ಉಂಟಾದರೆ ಪದ್ಮರಾಜ ಅವರೇ ಹೊಣೆಗಾರರಾಗಿರುತ್ತಾರೆ. ಹಾಗಾಗಿ ನನಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿ ಹಣವನ್ನು ಕೊಡುವಂತೆ ಹೆದರಿಸಿರುವ ಪದ್ಮರಾಜು ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಪದ್ಮರಾಜ್ ಅವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದೇವೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಈ ಸಂಜೆಗೆ ತಿಳಿಸಿದ್ದಾರೆ.
eesanje/url_46_238_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸದನದಲ್ಲಿ ಕಾವೇರಿದ ಹನುಮ ಧ್ವಜ ಕಿಚ್ಚು
2
+ ಬೆಂಗಳೂರು,ಫೆ.14- ಮಂಡ್ಯ ಜಿಲ್ಲೆ ಕೆರೆಗೋಡುವಿನ ಹನುಮ ಧ್ವಜದ ವಿಚಾರ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಧ್ವನಿಯಲ್ಲಿ ವಾಗ್ವಾದ ನಡೆಯಿತು. ನಿಯಮ 69 ರಡಿ ವಿರೋಧ ಪಕ್ಷದ ನಾಯಕ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡುವಾಗ ಕೆರೆಗೋಡುವಿನ ಹನುಮ ಧ್ವಜದ ವಿಚಾರವನ್ನು ಪ್ರಸ್ತಾಪಿಸಲು ಮುಂದಾದರು. ಆಗ ಆಡಳಿತ ಮತ್ತು ಬಿಜೆಪಿ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು, ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
3
+ ಹನುಮ ಧ್ವಜದ ವಿಚಾರವನ್ನು ಪ್ರಸ್ತಾಪಿಸಲು ಮುಂದಾಗುತ್ತಿದ್ದಂತೆ ಕೃಷಿ ಸಚಿವ ಚೆಲುವರಾಯಸ್ವಾಮಿ ಆಕ್ಷೇಪ ವ್ಯಕ್ತಪಡಿಸಿ ರಾಷ್ಟ್ರೀಯ ಧ್ವಜವನ್ನು ತೆಗೆದುಹಾಕಿ ಎಂದು ಹೇಳುತ್ತೀರಾ ಎಂದು ಪ್ರಶ್ನಿಸಿದರು. ಶಾಸಕ ರವಿಕುಮಾರ್ ಮಾತನಾಡಿ, ನಿಮ್ಮ ಹೋರಾಟ ರಾಷ್ಟ್ರಧ್ವಜದ ವಿರುದ್ಧವೇ ಎಂದು ಪ್ರಶ್ನಿಸಿದರು. ನಯನಾ ಮೋಟಮ್ಮ ಮಾತನಾಡಿ, ನಿಮಗೆ ರಾಷ್ಟ್ರಧ್ವಜ ಬೇಕೇ, ಹನುಮ ಧ್ವಜ ಬೇಕೇ ಎಂದು ಕೇಳಿದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‍ರವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜೈಲಿಗೆ ಹಾಕಿ. ಸರ್ಕಾರ ನಿಮ್ಮದೇ ಅಲ್ಲವೇ ಎಂದು ಹೇಳಿದರು.
4
+ ಬಿಜೆಪಿಯ ಸುನಿಲ್‍ಕಮಾರ್ ಮಾತನಾಡಿ, ರಾಷ್ಟ್ರಧ್ವಜದ ಬಗ್ಗೆ ನೀವು (ಕಾಂಗ್ರೆಸ್) ತೋರುತ್ತಿರುವ ಕಳಕಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನವಾದಾಗ ಕಾಂಗ್ರೆಸ್‍ಗೆ ಈ ಕಳಕಳಿ ಇರಲಿಲ್ಲವೇ ಎಂದು ತಿರುಗೇಟು ನೀಡಿದರು. ಕೆಲಕಾಲ ಏರಿದ ಧ್ವನಿಯಲ್ಲಿ ಪರಸ್ಪರ ಆರೋಪ, ವಾಗ್ವಾದ ನಡೆದು ಸದನದಲ್ಲಿ ಗೊಂದಲ ಉಂಟಾಯಿತು.
5
+ ಸಭಾಧ್ಯಕ್ಷರು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರನ್ನು ಸಮಾಧಾನಪಡಿಸಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟರು. ಮಾತು ಮುಂದುವರೆಸಿದ ಅಶೋಕ್, ಕೆರೆಗೋಡಿನಲ್ಲಿ ಹನುಮ ಧ್ವಜ ಹಾರಿಸಲಾಗಿದೆ. ಪಂಚಾಯಿತಿ ಸದಸ್ಯರು ಆಗಸ್ಟ್ 15 ರಂದು ರಾಷ್ಟ್ರಧ್ವಜ ಹಾಗೂ ರಾಜ್ಯೋತ್ಸವದಂದು ನಾಡಧ್ವಜವನ್ನು ಹಾರಿಸುತ್ತಾರೆ. 108 ಅಡಿ ಧ್ವಜ ಸ್ತಂಭವನ್ನು ಸುತ್ತಮುತ್ತಲ ಗ್ರಾಮದವರಿಂದ ಹಣ ಸಂಗ್ರಹಿಸಿ ನಿರ್ಮಿಸಿದ್ದಾರೆ. ಒಂದು ವೇಳೆ ಅಕ್ರಮವಾಗಿ ಧ್ವಜಸ್ತಂಭ ನಿಲ್ಲಿಸಿದ್ದರೆ ಏಕೆ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.
6
+ ಕೆರೆಗೋಡಿಗೆ ನಾನು ಹೋಗುವಾಗ ಎಸ್ಕಾರ್ಟ್ ವಾಹನ ಕೆಟ್ಟುಹೋಯಿತು ಎಂದು ಹೇಳಿದರು ಎಂದಾಗ ಸಭಾಧ್ಯಕ್ಷರು ನನ್ನ ಎಸ್ಕಾರ್ಟ್ ಕೂಡ ನಿಂತುಹೋಗಿತ್ತು ಎಂದು ದನಿಗೂಡಿಸಿದರು. ಆಗ ಅಶೊಕ್‍ರವರು ಸಚಿವ ಚೆಲುವರಾಯಸ್ವಾಮಿಯವರ ಎಸ್ಕಾರ್ಟ್ ಕೂಡ ನಿಂತು ಹೋಗಿತ್ತು ಎಂದು ಅವರು ಹೇಳುತ್ತಿಲ್ಲ, ಸರ್ಕಾರವೇ ಕೆಟ್ಟ��� ಹೋಗಿದೆ ಎಂದು ಟೀಕಿಸಿದರು.
7
+ ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ
8
+ ರಾಷ್ಟ್ರಧ್ವಜವನ್ನು ಧ್ವಜಸ್ತಂಭದಲ್ಲಿ ಮಧ್ಯಾಹ್ನ ಹಾರಿಸಿದ್ದಾರೆ. ನಾವು ರಾಷ್ಟ್ರಧ್ವಜಕ್ಕೆ ಗೌರವ ಕೊಡುತ್ತೇವೆ. ರಾಷ್ಟ್ರಧ್ವಜವನ್ನು ಹಾರಿಸಿದಾಗ ಶಿಸ್ತುಪಾಲನೆ ಮಾಡಿಲ್ಲ. ಅದನ್ನು ಹಾರಿಸುವಾಗ ಹೂ ಬಳಸಿಲ್ಲ, ಗೌರವ ಸೂಚಿಸಿಲ್ಲ, ಹನುಮ ಧ್ವಜ ಹಾರಿಸಿದವರಿಗೆ ನೋಟಿಸ್ ಕೊಟ್ಟಿಲ್ಲ. ರಾತ್ರಿ 3 ಗಂಟೆ ಸಮಯದಲ್ಲಿ ಹನುಮ ಧ್ವಜವನ್ನು ಇಳಿಸಿದ್ದಾರೆ ಎಂದು ಆರೋಪಿಸಿದರು.
9
+ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿರುವ ವೈಮನಸ್ಯದಿಂದ ಹೀಗೆ ಮಾಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದು ನಾವಲ್ಲಾ, ನೀವು. ರಾಷ್ಟ್ರಧ್ವಜ ಹಾರಿಸುವ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಡಿಲ್ಲ. 35 ವರ್ಷದ ಹಿಂದೆ ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೇವೆ. ಕಾಶ್ಮೀರದ ಲಾಲ್‍ಚೌಕ್‍ನಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೇವೆ. ಸ್ವಾತಂತ್ರ್ಯ ಬಂದ 75 ವರ್ಷದ ನಂತರ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೇವೆ. ನಾವೆಲ್ಲೂ ರಾಷ್ಟ್ರಧ್ವಜ ಇಳಿಸಿ ಎಂದು ಹೇಳಿಲ್ಲ. ಹನುಮನ, ರಾಮನ ಮೇಲಿನ ದ್ವೇಷಕ್ಕೆ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.
10
+ ಸಭಾಧ್ಯಕ್ಷರು ಅವಕಾಶ ಕೊಟ್ಟರೆ ವಾಸ್ತವ ಸ್ಥಿತಿ ಹೇಳುತ್ತೇನೆ ಎಂದು ಶಾಸಕ ರವಿಕುಮಾರ್ ಹೇಳಿದರು. ಆ ಸಂದರ್ಭದಲ್ಲಿ ಸಭಾಧ್ಯಕ್ಷರು ಅವಕಾಶ ನೀಡದೇ ಇದ್ದಾಗ ಈ ವಿಚಾರಕ್ಕೆ ತೆರೆ ಬಿದ್ದಿತು.
eesanje/url_46_238_7.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕೆ.ಗೋಪಾಲಯ್ಯಗೆ ಪ್ರಾಣ ಬೆದರಿಕೆ ಪ್ರಕರಣ
2
+ ಬೆಂಗಳೂರು,ಫೆ.14- ಬಿಬಿಎಂಪಿಯ ಮಾಜಿ ಸದಸ್ಯರೊಬ್ಬರು ಅವಾಚ್ಯ ಶಬ್ದಗಳಿಂದ ಬೆದರಿಸಿ ಪ್ರಾಣಬೆದರಿಕೆ ಹಾಕಿದ್ದು ತಮ್ಮ ಕುಟುಂಬಕ್ಕೆ ರಕ್ಷಣೆ ಒದಗಿಸುವಂತೆ ಮಾಜಿ ಸಚಿವರೂ ಆಗಿರುವ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ವಿಧಾನಸಭೆಯಲ್ಲಿಂದು ಪ್ರಸ್ತಾಪಿಸಿದ್ದು, ಅದಕ್ಕೆ ಬಿಜೆಪಿಯ ಶಾಸಕರು ಬೆಂಬಲ ವ್ಯಕ್ತಪಡಿಸಿದರು.
3
+ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬೆದರಿಕೆ ಹಾಕಿದ ಆರೋಪಿಯನ್ನು ಸಂಜೆಯ ಒಳಗೆ ಬಂಧಿಸಬೇಕು. ಇಲ್ಲ ಠಾಣೆಯ ಇನ್ಸ್‍ಪೆಕ್ಟರ್ ಅವರನ್ನು ಅಮಾನತುಪಡಿಸಬೇಕೆಂದು ಖಾರವಾಗಿ ಸೂಚನೆ ನೀಡಿದ ಪ್ರಸಂಗ ನಡೆಯಿತು. ಪ್ರಶ್ನೋತ್ತರದ ಬಳಿಕ ಶೂನ್ಯ ವೇಳೆಯಲ್ಲಿ ಗೋಪಾಲಯ್ಯ ಅವರು ವಿಷಯ ಪ್ರಸ್ತಾಪಿಸಿ ನಿನ್ನೆ ರಾತ್ರಿ 11 ಗಂಟೆ 1 ನಿಮಿಷಕ್ಕೆ ಬಿಬಿಎಂಪಿಯ ಮಾಜಿ ಸದಸ್ಯ ಪದ್ಮರಾಜ್ ತಮಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆ ಪದಗಳನ್ನು ಇಲ್ಲಿ ಹೇಳಲು ಸಾಧ್ಯವಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕಿದ್ದಾರೆ.
4
+ ಬಸವೇಶ್ವರ ನಗರದಲ್ಲಿ ಕ್ಲಬ್ ನಡೆಸುವ ಈ ವ್ಯಕ್ತಿ ರಾತ್ರಿಯಾಗುತ್ತಿದ್ದಂತೆ ಪಾನಮತ್ತನಾಗಿ ಮದವೇರಿ ನನ್ನನ್ನೂ ಸೇರಿದಂತೆ ಕುಟುಂಬದ ಅನೇಕರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ. ಸುರೇಶ್‍ಕುಮಾರ್ ಅವರಂತಹ ಶಾಸಕರು ಶಕ್ತಿಯಿಲ್ಲದೆ ದೂರು ನೀಡಿಲ್ಲ. ಸದರಿ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ರಾತ್ರಿಯಿಡೀ ಏಳೆಂಟು ಗಂಟೆ ಅವರ ಮನೆ ಎದುರು ಕಾವಲು ಕಾದಿದ್ದಾರೆ. ಬಾಗಿಲು ತೆರೆದು ಹೊರಬರದೇ ಒಳಗಿದ್ದ ವ್ಯಕ್ತಿ ಬೆಳಿಗ್ಗೆ 10 ಗಂಟೆಗೆ ನಿಶೆ ಇಳಿದ ಮೇಲೆ ಹೊರಹೋಗಿದ್ದಾನೆ. ಇಂತಹವರು ಸಮಾಜಕ್ಕೆ ಬೇಕೇ ಎಂದು ಪ್ರಶ್ನಿಸಿದರು.
5
+ ಸದರಿ ವ್ಯಕ್ತಿಯನ್ನು ಬಂಧಿಸಿ 6 ತಿಂಗಳ ಕಾಲ ಗಡಿಪಾರು ಮಾಡಬೇಕು. ತಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಬೆಂಗಳೂರಿನಲ್ಲಿ ಅನೈತಿಕವಾಗಿ ನಡೆಯುತ್ತಿರುವ ಕ್ಲಬ್‍ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಶಾಸಕ ಸುರೇಶ್‍ಕುಮಾರ್ ಮಾತನಾಡಿ, ಶಾಸಕರಿಗೆ ರಕ್ಷಣೆ ಇಲ್ಲ ಎಂದಾದರೆ ಜನರಿಗೆ ತಪ್ಪು ಸಂದೇಶ ಹೋಗುತ್ತದೆ. ರಾತ್ರಿ ದೂರು ಕೊಟ್ಟರೂ ಈವರೆಗೂ ಏಕೆ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
6
+ ಸದರಿ ವ್ಯಕ್ತಿಯ ನಡವಳಿಕೆಗೆ ನಾನು ಮತ್ತು ಅಶೋಕ್‍ರವರು ಫಲಾನುಭವಿಗಳಾಗಿದ್ದೇವೆ. ಪೊಲೀಸರು ಆತನ ಮನೆಬಾಗಿಲಿಗೆ ಹೋದಾಗ ಒಳಗಿನಿಂದಲೇ ಆತ ಪ್ರಭಾವಿಗಳಿಗೆ ಕರೆ ಮಾಡಿ ಶಿಫಾರಸ್ಸು ಮಾಡುತ್ತಿದ್ದಾನೆ. ಗೋಪಾಲಯ್ಯ ಅವರಿಗೆ ಬೆದರಿಕೆ ಹಾಕಿದ್ದಾನೆ ಎಂದಾದರೆ ಆತನ ಉದ್ಧಟತನದ ಮಟ್ಟವನ್ನು ಅಂದಾಜಿಸಬಹುದು ಎಂದು ಆರೋಪಿಸಿದರು.
7
+ ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ
8
+ ಬಿಜೆಪಿಯ ಅರಗ ಜ್ಞಾನೇಂದ್ರ ನಮ್ಮ ಸರ್ಕಾರದಲ್ಲಿ ಕ್ಲಬ್ ಕ್ಯ��ಸಿನೋಗಳು ಬಂದ್ ಆಗಿದ್ದವು. ಗೋಪಾಲಯ್ಯ ಅವರಂತಹ ಸಜ್ಜನ ಮನುಷ್ಯರಿಗೆ ಬೆದರಿಕೆ ಹಾಕಿರುವುದು ಖಂಡನೀಯ. ಶಾಸಕರೇ ಅಸಹಾಯಕ ಸ್ಥಿತಿಗೆ ತಲುಪಿದ್ದಾರೆಂದರೆ ಜನಸಾಮಾನ್ಯರ ಪಾಡೇನು? ಯಾವ ಶಕ್ತಿ ಅವನನ್ನು ರಕ್ಷಿಸುತ್ತಿದೆ? ದೂರು ಕೊಟ್ಟರೂ ಏಕೆ ಬಂಧಿಸಿಲ್ಲ? ಎಂದು ಪ್ರಶ್ನಿಸಿದ್ದಲ್ಲದೆ, ಅಕ್ರಮ ಕ್ಲಬ್‍ಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು.
9
+ ವಿರೋಧಪಕ್ಷದ ನಾಯಕ ಆರ್.ಅಶೋಕ್, ಬೆದರಿಕೆ ಹಾಕಿದ ವ್ಯಕ್ತಿ ಕುಡಿದಿದ್ದಾನೆ. ಆತನ ನಿಶೆ ಇಳಿಯಲಿ ಎಂದು ಪೊಲೀಸರು ಕಾದು ಕುಳಿತಿರುವುದು ಹಾಸ್ಯಾಸ್ಪದ. ಈ ರೀತಿ ಕಾನೂನಿನಲ್ಲಿ ವಿನಾಯಿತಿ ನೀಡಲು ಅವಕಾಶವಿದೆಯೇ? ಪೊಲೀಸ್ ಠಾಣೆಯಿಂದ ಸ್ವಲ್ಪವೇ ದೂರದಲ್ಲಿದ್ದರೂ ಏಕೆ ಬಂಧಿಸಿಲ್ಲ? ಆರೋಪಿಗಳಿಗೆ ಪೊಲೀಸರು ರಾಜಾತೀಥ್ಯ ನೀಡುವುದು ಅಗತ್ಯವೇ? ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಶಾಸಕರನ್ನು ಅವಹೇಳನ ಮಾಡಿರುವ ವ್ಯಕ್ತಿ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
10
+ ಸರ್ಕಾರದ ಪರವಾಗಿ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ, ಸದಸ್ಯರ ಚರ್ಚೆಗಳನ್ನು ಗೃಹಸಚಿವರ ಗಮನಕ್ಕೆ ತಂದು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಕಾನೂನು ಪಾಲನೆಯ ವಿಷಯದಲ್ಲಿ ನಮ್ಮ ಸರ್ಕಾರ ಯಾವುದೇ ತಾರತಮ್ಯ ಮಾಡುವುದಿಲ್ಲ. ಆ ವ್ಯಕ್ತಿ ಬಿಜೆಪಿಯಲ್ಲಿದ್ದರು, ಕಾಂಗ್ರೆಸ್‍ಗೆ ಬಂದಿದ್ದರು. ಈಗ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ. ರಾಜಕೀಯ ಹೊರತಾಗಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.
11
+ ಈ ಹಂತದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಮಧ್ಯಪ್ರವೇಶಿಸಿ, ನಿನ್ನೆ ರಾತ್ರಿ ಘಟನೆ ನಡೆದರೂ ಇವರನ್ನು ಏಕೆ ಬಂಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಆರೋಪಿಯನ್ನು ಇಂದು ಮಧ್ಯಾಹ್ನ ಇಲ್ಲ ಸಂಜೆಯೊಳಗೆ ಬಂಧಿಸಬೇಕು. ಇಲ್ಲವಾದರೆ ಸದರಿ ಠಾಣೆಯ ಇನ್ಸ್‍ಪೆಕ್ಟರ್ ಅನ್ನು ಅಮಾನತು ಮಾಡಿ ಎಂದು ಸೂಚನೆ ನೀಡಿದರು.
12
+ ಈ ಹಂತದಲ್ಲಿ ಗೃಹಸಚಿವರು ವಿಧಾನಪರಿಷತ್‍ನಲ್ಲಿದ್ದದ್ದರಿಂದ ಸರ್ಕಾರದಿಂದ ತಕ್ಷಣವೇ ಸ್ಪಷ್ಟನೆ ಸಿಗಲಿಲ್ಲ. ಕೆಲ ಸಮಯದ ಬಳಿಕ ಆರ್.ಅಶೋಕ್‍ರವರು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಚರ್ಚೆ ಮಾಡುವಾಗ ಗೃಹಸಚಿವ ಪರಮೇಶ್ವರ್ ಆಗಮಿಸಿದರು. ಆ ಸಂದರ್ಭದಲ್ಲಿ ವಿಚಾರ ಮತ್ತೆ ಗ್ರಾಸವಾಯಿತು. ಉತ್ತರ ನೀಡಿದ ಸಚಿವ ಪರಮೇಶ್ವರ್, ಗೋಪಾಲಯ್ಯ ಅವರ ದೂರು ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
13
+ ಅಕ್ರಮ ಗಣಿಗಾರಿಕೆ : ರಾಜಸ್ಥಾನದ ಹಲವು ಸ್ಥಳಗಳಲ್ಲಿ ಶೋಧ
14
+ ಆರೋಪಿಯನ್ನು ಬಂಧಿಸಲು ಈಗಲೂ ಅವರ ಮನೆ ಮುಂದೆ ಕಾಯುತ್ತಿದ್ದಾರೆ. ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆಗೆಯುತ್ತಿಲ್ಲ. ಅನಿವಾರ್ಯವಾದರೆ ಬಾಗಿಲು ಹೊಡೆದು ಒಳಹೋಗಿ ಬಂಧಿಸಲಾಗುವುದು ಎಂದು ಸ್ಪಷ್ಟಪಡಿಸ��ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸುರೇಶ್‍ಕುಮಾರ್, 1975 ರ ಜೂನ್ 25 ರಂದು ವಾಜಪೇಯಿ, ಮಧುದಂಡವತೆ ಸೇರಿದಂತೆ ಗಣ್ಯ ನಾಯಕರು ಶಾಸಕರ ಭವನದಲ್ಲಿ ತಂಗಿದ್ದರು. ಅವರನ್ನು ಯಾವುದೇ ಮುಲಾಜಿಲ್ಲದೇ ಪೊಲೀಸರು ಬಂಧಿಸಿದ್ದರು. ಈ ವ್ಯಕ್ತಿಗೆ ವಿವಿಐಪಿ ಉಪಚಾರವೇಕೆ. ಇಷ್ಟೊತ್ತಾದರೂ ಬಾಗಿಲು ಕಾಯುತ್ತಿದ್ದಾರೆಂದು ಇದು ಪೊಲೀಸರಿಗೆ ಶೋಭೆ ತರುವುದಿಲ್ಲ. ಅಸಮರ್ಥತೆ ಎಂದಾಗುತ್ತದೆ ಎಂದು ಕಿಡಿಕಾರಿದರು. ಆ ವೇಳೆಗೆ ಅಧಿಕಾರಿಗಳ ಗ್ಯಾಲರಿಯಿಂದ ಬಂದ ಸಂದೇಶ ಪಡೆದು ಸ್ಪಷ್ಟನೆ ನೀಡಿದ ಗೃಹಸಚಿವರು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
eesanje/url_46_238_8.txt ADDED
@@ -0,0 +1,7 @@
 
 
 
 
 
 
 
 
1
+ 100 ಎಕರೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ : ಕ್ರೀಡಾ ಸಚಿವ ಬಿ.ನಾಗೇಂದ್ರ
2
+ ಬೆಂಗಳೂರು,ಫೆ.14- ಯಲಹಂಕ ತಾಲೂಕು ಹೆಸರುಘಟ್ಟ ಹೋಬಳಿಯ ಮಾವಳ್ಳಿಪುರ ಗ್ರಾಮದ ಸರ್ವೆ ನಂ.8 ರಲ್ಲಿ 100 ಎಕರೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಮತ್ತು ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.
3
+ ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಯಲಹಂಕ ಕ್ಷೇತ್ರದ ಎಸ್.ಆರ್.ವಿಶ್ವನಾಥ್ ವಿಷಯ ಪ್ರಸ್ತಾಪಿಸಿದಾಗ 60 ಎಕರೆ ಜಮೀನು ಕ್ರೀಡಾ ವಿಶ್ವವಿದ್ಯಾಲಯಕ್ಕಾಗಿ ಮಂಜೂರು ಮಾಡಲು ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿತ್ತು. ಹೆಚ್ಚುವರಿಯಾಗಿ 40 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಮನವಿ ಮಾಡಲಾಗಿದೆ. ಒಟ್ಟು 100 ಎಕರೆಯಲ್ಲಿ ಎಲ್ಲಾ ಕ್ರೀಡೆಗಳನ್ನೂ ಒಂದೇ ಸೂರಿನಡಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಸುಸಜ್ಜಿತವಾದ ಕ್ರೀಡಾಂಗಣ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.
4
+ ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ವಿಶ್ವನಾಥ್ ಅವರು, ಸಚಿವರು ಕ್ರೀಡಾಂಗಣ ಸ್ಥಾಪನೆ ಮಾಡಿದ ಬಳಿಕ ಉದ್ಘಾಟನೆಯ ದಿನ ಬೆಳ್ಳಿರಥದಲ್ಲಿ ಮೆರವಣಿಗೆ ಮಾಡುವುದಾಗಿ ಹೇಳಿದರು. ಆನೇಕಲ್ ಕ್ಷೇತ್ರದ ಶಿವಣ್ಣ ಅವರು ತಮ್ಮ ಕ್ಷೇತ್ರದಲ್ಲಿ 7 ಲಕ್ಷ ಜನಸಂಖ್ಯೆ ಇದೆ. ಹೀಗಾಗಿ ಆನೇಕಲ್ ಮತ್ತು ಸರ್ಜಾಪುರ ಎರಡೂ ಕಡೆ ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.
5
+ ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ
6
+ ಇದಕ್ಕೆ ಉತ್ತರಿಸಿದ ಸಚಿವ ನಾಗೇಂದ್ರ ಮೊದಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಆನೇಕಲ್ ತಾಲೂಕಿನ ಕ್ರೀಡಾಂಗಣವನ್ನು ಸುಸಜ್ಜಿತವಾಗಿ ನಿರ್ಮಿಸಲಾಗುವುದು, ತಾವು ಸ್ಥಳಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು.
7
+ 5 ಲಕ್ಷಕ್ಕಿಂತ ಮೇಲ್ಪಟ್ಟ ಜನಸಂಖ್ಯೆಯಿರುವ ಪ್ರದೇಶಗಳಲ್ಲಿ 2 ಕ್ರೀಡಾಂಗಣವನ್ನು ನಿರ್ಮಿಸಲು ಮಾರ್ಗಸೂಚಿಯನ್ನು ರೂಪಿಸಲಾಗಿದೆ. ಅದರ ಅನುಸಾರ ಅನುದಾನದ ಲಭ್ಯತೆ ಆಧರಿಸಿ ಕ್ರೀಡಾಂಗಣವನ್ನು ನಿರ್ಮಿಸುವುದಾಗಿ ಭರವಸೆ ನೀಡಿದರು.
eesanje/url_46_238_9.txt ADDED
@@ -0,0 +1,5 @@
 
 
 
 
 
 
1
+ ಗ್ರಾಮ ವಿಕಾಸ್ ಯೋಜನೆಯಡಿ 991 ಗ್ರಾಮಗಳ ಅಭಿವೃದ್ಧಿ
2
+ ಬೆಂಗಳೂರು,ಫೆ.14- ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಯಾವುದೇ ಗ್ರಾಮಗಳನ್ನು ಐಕ್ಯ ಮಾಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯು 2017-18 ರಲ್ಲಿ ಪ್ರಾರಂಭವಾಗಿದ್ದು, ಈ ಯೋಜನೆಯಡಿ 991 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
3
+ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೊಂದು ಕಾಮಗಾರಿಗಳು ಜಮೀನಿನ ವಿವಾದ, ಕಾಮಗಾರಿಗಳ ಬದಲಾವಣೆ, ಸಾರ್ವಜನಿಕ ವಿರೋಧದಿಂದ ವಿಳಂಬವಾಗಿದೆ ಎಂದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 26 ಗ್ರಾಮಗಳು ಆಯ್ಕೆಯಾಗಿದ್ದು, 330 ಕಾಮಗಾರಿಗಳನ್ನು ಹಂಚಿಕೆ ಮಾಡಲಾಗಿದ್ದು, 294 ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ 36 ಕಾಮಗಾರಿಗಳು ಬಾಕಿ ಇದ್ದು, ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
4
+ ಹಿಂದೆ ಪದ್ಮ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿದ್ದವು : ಉಪ ರಾಷ್ಟ್ರಪತಿ
5
+ ಆಯಾ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಆಯಾ ಇಲಾಖೆಯಲ್ಲೇ ಕೈಗೊಳ್ಳಲು ಸೂಚಿಸಲಾಗಿದೆ ಎಂದರು. ಇದಕ್ಕೂ ಮುನ್ನ ಮಾತನಾಡಿದ ಸುಬ್ಬಾರೆಡ್ಡಿ, 6 ವರ್ಷವಾದರೂ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಹಣ ಹಾಗೂ ಸಿಬ್ಬಂದಿ ಸಮಸ್ಯೆ ಇದೆ ಎಂದು ಸದನದ ಗಮನ ಸೆಳೆದರು.
eesanje/url_46_239_1.txt ADDED
@@ -0,0 +1,6 @@
 
 
 
 
 
 
 
1
+ ಹಿಂದೆ ಪದ್ಮ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿದ್ದವು : ಉಪ ರಾಷ್ಟ್ರಪತಿ
2
+ ಗುವಾಹಟಿ,ಫೆ.14- ಪದ್ಮ ಪ್ರಶಸ್ತಿಗಳು ಒಂದು ಕಾಲದಲ್ಲಿ ಪೋಷಣೆ ಮತ್ತು ಈವೆಂಟ್ ಮ್ಯಾನೇಜ್‍ಮೆಂಟ ನಿಂದ ನಡೆಸಲ್ಪಡುತ್ತಿದ್ದವು, ಆದರೆ ಈ ಪ್ರಕ್ರಿಯೆಯು ಈಗ ಪರಿವರ್ತನೆಯ ಬದಲಾವಣೆಗಳನ್ನು ಕಂಡಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಹೇಳಿದ್ದಾರೆ. ಇಲ್ಲಿ ಅಸ್ಸಾಂನ ಉನ್ನತ ನಾಗರಿಕ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದ ವೈವಿಧ್ಯತೆಯನ್ನು ಪ್ರತಿನಿಧಿಸುವ 22 ವ್ಯಕ್ತಿಗಳಿಗೆ ರಾಜ್ಯ ಮಾನ್ಯತೆಗಳನ್ನು ಅತ್ಯಂತ ಪಾರದರ್ಶಕ ರೀತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಹೇಳಿದರು.
3
+ ನಾವು ಇತ್ತೀಚಿನ ದಿನಗಳಲ್ಲಿ ಪದ್ಮ ಪ್ರಶಸ್ತಿಗಳಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ಮಾಡಿದ್ದೇವೆ ಎಂದು ನಾವು ನೋಡಿದ್ದೇವೆ. ಒಂದು ಸಮಯದಲ್ಲಿ ಪದ್ಮಗಳನ್ನು ಸುರಕ್ಷಿತವಾಗಿರಿಸಲು ಪ್ರೋತ್ಸಾಹವು ಪ್ರೇರಕ ಶಕ್ತಿ ಮತ್ತು ಈವೆಂಟ್ ಮ್ಯಾನೇಜ್ಮೆಂಟ ಗಳು ನಡೆಸುತ್ತಿದ್ದವು ಎಂದಿದ್ದಾರೆ.
4
+ ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು
5
+ ಪ್ರೋತ್ಸಾಹ, ಸ್ನೇಹ ಅಥವಾ ಈವೆಂಟ್ ಮ್ಯಾನೇಜ್‍ಮೆಂಟ್‍ನಿಂದ ಪಡೆದ ಪ್ರಶಸ್ತಿಯು ವಾಸ್ತವವಾಗಿ ಪ್ರಶಸ್ತಿಯಲ್ಲ ಏಕೆಂದರೆ ಯಾವುದೇ ವಿಶ್ವಾಸಾರ್ಹತೆ ಇರುವುದಿಲ್ಲ ಎಂದು ಧಂಖರ್ ಹೇಳಿದರು. ಅಸ್ಸಾಂ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರು ವಿವಿಧ ಕ್ಷೇತ್ರಗಳ 22 ಜನರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
6
+ ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಅವರಿಗೆ ಅತ್ಯುನ್ನತ ರಾಜ್ಯ ನಾಗರಿಕ ಪ್ರಶಸ್ತಿ ಅಸ್ಸಾಂ ಬೈಭವ ನೀಡಲಾಯಿತು. ಎರಡನೇ ಅತ್ಯುನ್ನತ ಪ್ರಶಸ್ತಿ ಅಸ್ಸಾಂ ಸೌರಭ್ ಅನ್ನು ನಾಲ್ವರಿಗೆ ನೀಡಲಾಯಿತು, ಮೂರನೇ ಅತ್ಯುನ್ನತ ಅಸ್ಸಾಂ ಗೌರವ್ ಅನ್ನು 17 ಜನರು ಸ್ವೀಕರಿಸಿದರು.
eesanje/url_46_239_10.txt ADDED
@@ -0,0 +1,4 @@
 
 
 
 
 
1
+ ಕೇಂದ್ರದಿಂದ ಯಾವುದೇ ಬರ ಪರಿಹಾರ ಸಿಕ್ಕಿಲ್ಲ : ಚೆಲುವರಾಯಸ್ವಾಮಿ ಅಸಮಾಧಾನ
2
+ ಬೆಂಗಳೂರು,ಫೆ.13- ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪರಿಹಾರ ನಿಧಿಯನ್ನು ಪರಿಷ್ಕರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನ ಪರಿಷತ್‍ನಲ್ಲಿ ಸದಸ್ಯ ಟಿ.ಎ.ಶರವಣ ಪ್ರಶ್ನೆಗೆ ತೋಟಗಾರಿಕೆ ಸಚಿವರ ಪರವಾಗಿ ಉತ್ತರಿಸಿದ ಅವರು,ಯಾವುದೇ ರಾಜ್ಯದಲ್ಲಿ ಪ್ರಕೃತಿ ವಿಕೋಪ ಉಂಟಾದ ವೇಳೆ ಮಾರ್ಗಸೂಚಿಯಡಿ ಪರಿಹಾರ ನಿಗದಿ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಬರಗಾಲ ಕಾಣಿಸಿಕೊಂಡಿರುವ ಕಾರಣ, ಮಾರ್ಗಸೂಚಿ ಪರಿಷ್ಕರಿಸುವಂತೆ ನಾವು ಮನವಿ ಮಾಡಿದ್ದೇವೆಎಂದು ತಿಳಿಸಿದರು.
3
+ ಬರಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ ನಾನು ದೆಹಲಿಗೆ ಹೋಗಿ ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರದಿಂದ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಿಂದ ಬರ ನಿರ್ವಹಣೆಗೆ ನಾವು ಕ್ರಮ ಕೈಗೊಂಡಿದ್ದೇವೆ 33 ಲಕ್ಷ ರೈತರಿಗೆ 2000 ರೂ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರದಿಂದ ಹಣ ಬಂದರೆ ಉಳಿದ ರೈತರಿಗೂ ಹಣ ಹಾಕುತ್ತೇವೆ ಎಂದರು.
4
+ ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ಈ ಮಾರ್ಗಸೂಚಿ ಪ್ರಕಾರ ಮಳೆಯಾಶ್ರಿತ ಬೆಳಗಳಿಗೆ 8500 ರೂ, ನೀರಾವರಿ ಬೆಳೆಗೆ 17000 ರೂ,ಹಾಗೂ ಬಹುವಾರ್ಷಿಕ ಬೆಳೆಗೆ25000ರೂ ಪರಿಹಾರ ನೀಡುತ್ತೇವೆ. ಒಂದು ವೇಳೆ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಿದರೆ,ರೈತರಿಗೆ ಹೆಚ್ಚಿನ ಪರಿಹಾರ ಸಿಗಲಿದೆ ಎಂದು ವಿವರಿಸಿದರು.ಕೃಷಿ, ರೇಷ್ಮೆ, ಮತ್ತು ತೋಟಗಾರಿಕೆ ಬೆಳೆ ಸೇರಿದಂತೆ ಬೆಳೆ ನಷ್ಟವಾಗಿರುವ ರೈತರಿಗೆ 2 ಸಾವರಿದಂತೆ ಇಲ್ಲಿಯವರೆಗೆ ಒಟ್ಟು 30,24,795 ರೈತರಿಗೆ573.28 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಂಡಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
eesanje/url_46_239_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಹುತೇಕ ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಫಿಕ್ಸ್..?
2
+ ಬೆಂಗಳೂರು, ಫೆ.13- ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದೆ. ಕರ್ನಾಟಕದಲ್ಲಿ ಎಂಪಿ ಎಲೆಕ್ಷನ್ ಕಾವು ಜೋರಾಗುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳ ಮೂಲಕ ಜನತೆ ಮುಂದೆ ಹೋಗಲಿದೆ. ಈ ಹಿನ್ನೆಲೆ ಬಿಜೆಪಿ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದ್ದು, ತನ್ನ ಭದ್ರಕೋಟೆಗಳನ್ನು ಮತ್ತಷ್ಟು ಭದ್ರಗೊಳಿಸಲು ಮುಂದಾಗಿದೆ. ಹೀಗಾಗಿ ಬಹುತೇಕ ಹಾಲಿ ಸಂಸದರನ್ನೇ ಮತ್ತೊಮ್ಮೆ ಕಣಕ್ಕಿಳಿ ಸುವ ಸಾಧ್ಯತೆಯಿದೆ.
3
+ ಹಾಲಿ ಸಂಸದರು ಸ್ಪರ್ಧಿಸಲು ಸಾಧ್ಯವಾಗದ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಹಾಲಿ ಸಂಸದರನ್ನು ಕಣಕ್ಕಿಳಿಸುವ ಮೂಲಕ ನಿರಂತರತೆಯನ್ನು ಕಾಯ್ದುಕೊಳ್ಳಲು ಬಿಜೆಪಿ ಮುಂದಾಗಿದೆ. ಕಮಲ ಪಡೆಯ ಈ ಕಾರ್ಯತಂತ್ರವನ್ನು ಹೆಸರು ಹೇಳಲಿಚ್ಛಿಸದ ಬಿಜೆಪಿಯ ಮಾಜಿ ಸಚಿವರೊಬ್ಬರೇ ಖಚಿತಪಡಿಸಿದ್ದಾರೆ. ಹೊಸ ಮುಖಗಳಿಗೆ ಆದ್ಯತೆ ಕೊಡಬೇಕು ಎಂದು ಬದಲಾವಣೆ ಮಾಡಿದರೆ ಪಕ್ಷಕ್ಕೆ ಹೊಡೆತ ಬೀಳಬಹುದು ಎಂಬುದನ್ನು ಬಿಜೆಪಿ ನಾಯಕರು ಅರಿತಂತೆ ಕಾಣುತ್ತಿದೆ.
4
+ ಹಾವೇರಿ ಕ್ಷೇತ್ರದಲ್ಲಿ ಸಂಸದ ಶಿವಕುಮಾರ್ ಉದಾಸಿ ಕಣದಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ಮತ್ತೊಬ್ಬರನ್ನು ಹುಡುಕಬೇಕಾದ ಅನಿವಾರ್ಯತೆ ಬಿಜೆಪಿಯಲ್ಲಿದೆ. ಇನ್ನು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯ ಬದಲಾಯಿಸುವ ಚಿಂತನೆಯನ್ನು ಬಿಜೆಪಿ ನಾಯಕರು ಮಾಡುತ್ತಿದ್ದು, ಹಾಲಿ ಸಂಸದೆ ಮಂಗಳಾ ಅಂಗಡಿ ಬದಲಿಗೆ ಬೇರೆಯವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಪಕ್ಷಕ್ಕೆ ವಾಪಸ್ ಆಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಆಗಬಹುದು ಎನ್ನಲಾಗಿದೆ.
5
+ ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್
6
+ ಅದು ಬಿಟ್ಟರೇ ಬಿಜಾಪುರ, ಧಾರವಾಡ ಮತ್ತು ಉತ್ತರ ಕನ್ನಡದಂತಹ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಯ ಬಗ್ಗೆ ವದಂತಿಗಳು ಗಿರಕಿ ಹೊಡೆಯುತ್ತಲೇ ಇವೆ. ಆದರೆ, ಈ ಹಿಂದಿನ ಚುನಾವಣೆಗಳಲ್ಲಿ ಬದಲಾವಣೆಗೆ ಕೈ ಹಾಕಿ ಕೈ ಸುಟ್ಟುಕೊಂಡಿರುವುದನ್ನು ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್ ಮುಂದೆ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆ ಅಭ್ಯರ್ಥಿ ಆಯ್ಕೆಯಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲು ಬಿಜೆಪಿ ಮುಂದಾಗಲ್ಲ ಎಂದು ಹೇಳಲಾಗಿದೆ.
7
+ ಬದಲಾವಣೆಗಿಂತ ಗೆಲ್ಲುವ ಕುದುರೆಗಳಿಗೆ ಒತ್ತು!ಇನ್ನು, ಅಭ್ಯರ್ಥಿ ಆಯ್ಕೆಯಲ್ಲಿ ಗೆಲುವೇ ಪ್ರಮುಖ ಪಾತ್ರವಹಿಸುತ್ತದೆ. ಬದಲಾವಣೆಗಿಂತ ಗೆಲ್ಲುವ ಕುದುರೆಗಳಿಗೆ ಬಿಜೆಪಿ ಒತ್ತು ನೀಡಲಿದ್ದು, ಟಿಕೆಟ್ ಅನಿಶ್ಚಿತತೆ ಎದುರಿಸುತ್ತಿರುವ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, ಬಿಜಾಪುರ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಹಂಚಿಕೆ ಸಾಧ್ಯತೆಯ ಸುಳಿವನ್ನು ಬಿಜೆಪಿಯ ಕೋರ್ ಕಮಿಟಿ ಸದಸ್ಯರೊಬ್ಬರು ನೀಡಿದ್ದಾರೆ.
8
+ ವಿಭಿನ್ನ ಸಮುದಾಯಗಳನ್ನು ಪ್ರತಿನಿಸುವ ಬಿಜಾಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಕಲಬುರಗಿ ಸಂಸದ ಉಮೇಶ್ ಜಾಧವ್ ಅವರ ವಿಚಾರದಲ್ಲಿ ಪಕ್ಷವು ಜಾಣ ನಡೆ ಅನುಸರಿಸಲಿದ್ದು, ಸಮತೋಲನ ಕಾಯ್ದುಕೊಳ್ಳುವ ದೃಷ್ಟಿಯಿಂದ ಅವರನ್ನು ಬದಲಾಯಿಸುವ ಕೆಲಸಕ್ಕೆ ಕೈ ಹಾಕಲ್ಲ ಎನ್ನಲಾಗಿದೆ. ಇನ್ನು, ಬಾಗಲಕೋಟೆಯಲ್ಲಿ ಹಾಲಿ ಸಂಸದ ಪಿಸಿ ಗದ್ದಿಗೌಡರ್ ಅವರಂತಹ ನಾಯಕರು ತಮ್ಮದೇ ಪ್ರಭಾವವನ್ನು ಹೊಂದಿದ್ದಾರೆ. ಅಂತವರಿಗೆ ಟಿಕೆಟ್ ನಿರಾಕರಿಸಿದರೆ ಬಿಜೆಪಿಯ ಚುನಾವಣಾ ಭವಿಷ್ಯಕ್ಕೆ ಹೊಡೆತ ಬೀಳಬಹುದು ಎನ್ನಲಾಗಿದೆ.
9
+ ಮೇನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ : 100ಕ್ಕೆ 100 ಅಂಕ ಪಡೆದ 23 ವಿದ್ಯಾರ್ಥಿಗಳು
10
+ ಹಾವೇರಿಯಲ್ಲಿ ಶಿವಕುಮಾರ್ ಉದಾಸಿ ಬದಲಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಬಿಸಿ ಪಾಟೀಲ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್, ಡಾ.ಮಹೇಶ್ ನಾಲ್ವಾಡ ಅವರ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಇನ್ನು, ಅನಂತಕುಮಾರ್ ಹೆಗಡೆಯವರು ಇತ್ತೀಚೆಗೆ ಮತ್ತೆ ಸಕ್ರಿಯರಾಗಿದ್ದು, ಉತ್ತರ ಕನ್ನಡದಲ್ಲಿ ಅವರೇ ಬಿಜೆಪಿ ಅಭ್ಯರ್ಥಿಯಾಗಿ ಮುಂದುವರಿಯುವ ಸಾಧ್ಯತೆ ಇದೆ.
eesanje/url_46_239_12.txt ADDED
@@ -0,0 +1,4 @@
 
 
 
 
 
1
+ ಭದ್ರಾ ಯೋಜನೆ ಭೂ ಸ್ವಾಧೀನಕ್ಕೆ 500 ಕೋಟಿ ಮೀಸಲಿಗೆ ಆಗ್ರಹ
2
+ ಬೆಂಗಳೂರು, ಫೆ.13- ತುಂಗಾನದಿಯಿಂದ ಭದ್ರಾ ಜಲಾಶಯಕ್ಕೆ 17 ಟಿಎಂಸಿ ನೀಡು ಹರಿಸುವ ಮಹತ್ವದ ಯೋಜನೆಗೆ ಭೂ ಸ್ವಾಧೀನಪಡಿಸಿಕೊಳ್ಳಲು ಮುಂದಿನ ಬಜೆಟ್‍ನಲ್ಲಿ 500 ಕೋಟಿ ರೂ. ಮೀಸಲಿರಿಸುವಂತೆ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಒತ್ತಾಯಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರ ಜೆಡಿಎಸ್ ಶಾಸಕ ಸಿ.ಬಿ.ಸುರೇಶ್ ಬಾಬು ಪ್ರಶ್ನೆ ಕೇಳಿ, ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ನೆನಗುದಿಗೆ ಬಿದ್ದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
3
+ ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್
4
+ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ 856 ಕೋಟಿ ರೂ.ಗಳ ಮಂಜೂರಾತಿ ನೀಡಲಾಗಿದೆ. ಕೆಲವು ಕಡೆ ರೈತರು ವಿರೋಧ ಪಡಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇವೆ. ಭೂಸ್ವಾೀಧಿನ ವಿಳಂಬವಾಗುತ್ತಿದೆ. ಭದ್ರಾ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದಂತೆ 5300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆಕ್ಷೇಪಿಸಿದರು. ಹಿರಿಯರಾದ ಟಿ.ಬಿ.ಜಯಚಂದ್ರ ಅವರು ತಮ್ಮ ಕ್ಷೇತ್ರಕ್ಕೆ ನೀರು ತೆಗೆದುಕೊಂಡು ಹೋಗಲು ಶ್ರಮಿಸಿದ್ದಾರೆ. ಅವರ ಬೇಡಿಕೆಯಂತೆ ಭೂ ಸ್ವಾೀಧಿನಕ್ಕೆ ವಿಶೇಷ ಹಣ ನೀಡಲು ಪರಿಶೀಲಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
eesanje/url_46_239_2.txt ADDED
@@ -0,0 +1,8 @@
 
 
 
 
 
 
 
 
 
1
+ : ಪ್ಲೇಟ್ ಬದಲಾವಣೆಗೆ 3 ತಿಂಗಳು ಅವಧಿ ವಿಸ್ತರಣೆ
2
+ ಬೆಂಗಳೂರು,ಫೆ.14- ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಸಮಯ ಅವಕಾಶವನ್ನು ರಾಜ್ಯದಲ್ಲಿ ಇನ್ನು ಮೂರು ತಿಂಗಳು ವಿಸ್ತರಣೆ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯ ಮಧು.ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು.
3
+ ಅತಿ ಸುರಕ್ಷತಾ ನೋಂದಣಿ ಫಲಕಗಳ ಯೋಜನೆಯನ್ನು ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಇದರಿಂದಾಗಿ ವಾಹನಗಳನ್ನು ಬಳಸಿಕೊಂಡು ಅಪರಾಧ ಎಸಗುವುದನ್ನು ತಡೆಗಟ್ಟುವುದರ ಜೊತೆಗೆ ರಸ್ತೆಯ ಮೇಲೆ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
4
+ ಶೇ.100ರಷ್ಟು ವಿವಿಪ್ಯಾಟ್ ಬಳಕೆಗೆ ಕಾಂಗ್ರೆಸ್ ಆಗ್ರಹ
5
+ ನೋಂದಣಿ ಫಲಕವು ಅಲ್ಯೂಮಿನಿಯಂನಿಂದ ನಿರ್ಮಿತವಾದ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಇದಾಗಿದೆ. ಮರುಬಳಕೆ ಮಾಡಲಾಗದ ಎರಡು ಲಾಕ್‍ಗಳನ್ನು ಬಳಸಿಕೊಂಡು ವಾಹನದ ಮೇಲೆ ಅಳವಡಿಸಲಾಗುತ್ತದೆ. 20 ಎಂ.ಎಂ* 20 ಎಂಎಂ ಗಾತ್ರದ ಚಕ್ರದ ಕ್ರೋಮಿಯಂ ಆಧಾರಿತ ಹೋಲೊಗ್ರಾಮ್‍ನ್ನು ಹಿಂಭಾಗ ಹಾಗೂ ಮುಂಭಾಗ ಎರಡು ಪ್ಲೇಟ್‍ಗಳ ಮೇಲಿನ ಎಡ ಮೂಲೆಯಲ್ಲಿ ಬಿಸಿ ಟ್ಯಾಪಿಂಗ್ ಮೂಲಕ ಅಳವಡಿಸಲಾಗುತ್ತದೆ.
6
+ ಇದು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಇಲಾಖೆಯ ಅಧಿಕೃತ ವೆಬ್‍ಸೈಟ್ ಬಳಸಿಕೊಂಡು ಆನ್‍ಲೈನ್ ಮೂಲಕವೇ ವಾಹನ ಸವಾರರು ನೋಂದಣಿ ಮಾಡಿಕೊಳ್ಳಬಹುದೆಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಯಾವುದೇ ಕಾರಣಕ್ಕೂ ವಾಹನ ಸವಾರರು, ಆರ್‍ಟಿಒ ಕಚೇರಿ ಇಲ್ಲವೇ ಬೇರೊಂದು ಕಡೆ ನಗದು ಕೊಟ್ಟು ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಅಗತ್ಯವಿಲ್ಲ.
7
+ ‘ದೆಹಲಿ ಚಲೋ’ ಪ್ರತಿಭಟನೆ : ಮತ್ತೆ ರೈತರ ಮೇಲೆ ಆಶ್ರುವಾಯು ಪ್ರಯೋಗ
8
+ ಇದು ನಗದು ರಹಿತ ಮತ್ತು ಆನ್‍ಲೈನ್ ಮೂಲಕ ನಡೆಯುವ ಪ್ರಕ್ರಿಯೆ ಆಗಿದೆ. ಒಂದು ವೇಳೆ ಯಾರಾದರೂ ನಕಲಿ ವೆಬ್‍ಸೈಟ್ ಬಳಸಿಕೊಂಡು ನೋಂದಣಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಕೊಟ್ಟರು.
eesanje/url_46_239_3.txt ADDED
@@ -0,0 +1,6 @@
 
 
 
 
 
 
 
1
+ ಶೇ.100ರಷ್ಟು ವಿವಿಪ್ಯಾಟ್ ಬಳಕೆಗೆ ಕಾಂಗ್ರೆಸ್ ಆಗ್ರಹ
2
+ ನವದೆಹಲಿ, ಫೆ 14 – ಚುನಾವಣೆ ಸಂದರ್ಭದಲ್ಲಿ ಪ್ರತಿ ಇವಿಎಂಗಳಲ್ಲಿ ಶೇ.100 ರಷ್ಟು ವಿವಿಪ್ಯಾಟ್‍ಗಳಿಗೆ ಅವಕಾಶ ನೀಡದಿರುವುದು ಭಾರತೀಯ ಮತದಾರರಿಗೆ ಮಾಡಿರುವ ಭಯಾನಕ ಅನ್ಯಾಯ ಎಂದು ಕಾಂಗ್ರೆಸ್ ಆರೋಪಿಸಿದೆ. ಎಕ್ಸ್ ನಲ್ಲಿನ ಪೋಸ್ಟ್‍ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ (ಇಂಡಿಯಾ) ಪಕ್ಷಗಳು ಜೂನ್ 2023 ರಿಂದ ವಿವಿಪ್ಯಾಟ್‍ಗಳ (ಮತದಾರ ಪರಿಶೀಲಿಸಬಹುದಾದ ಪೇಪರ್ ಆಡಿಟ್) ಹೆಚ್ಚಿನ ಬಳಕೆಯ ವಿಷಯದ ಕುರಿತು ಚುನಾವಣಾ ಆಯೋಗವನ್ನು ಭೇಟಿ ಮಾಡಲು ಅಪಾಯಿಂಟ್‍ಮೆಂಟ್‍ಗಾಗಿ ವಿನಂತಿಸುತ್ತಿವೆ ಎಂದು ಹೇಳಿದರು.
3
+ ಆದರೂ ಚುನಾವಣಾ ಆಯೋಗ ಶೇ. 100 ರಷ್ಟು ವಿವಿಪ್ಯಾಟ್‍ಗಳಿಗೆ ಅವಕಾಶ ನೀಡದಿರುವುದು ದುರಂತ ಎಂದು ಬಣ್ಣಿಸಿದ್ದಾರೆ. ಏಪ್ರಿಲ್ 8, 2019 ರಂದು, ವಿವಿಪ್ಯಾಟ್ ಸ್ಲಿಪ್ ಹೊಂದಾಣಿಕೆಗೆ ಒಳಗಾಗುವ ಚುನಾವಣಾ ಬೂತ್‍ಗಳ ಸಂಖ್ಯೆಯನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ಆಯೋಗಕ್ಕೆ ಮನವಿ ಮಾಡಿತ್ತು ಎಂದು ಅವರು ನೆನಪಿಸಿದ್ದಾರೆ.
4
+ ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು
5
+ ಚಂದ್ರಬಾಬು ನಾಯ್ಡು ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಅದೇ ಚಂದ್ರಬಾಬು ನಾಯ್ಡು ಅವರು ಒಂದು ಕಾಲದಲ್ಲಿ ಹೈಟೆಕ್ ಮುಖ್ಯಮಂತ್ರಿ ಎಂದು ಕರೆಯಲ್ಪಡುತ್ತಿದ್ದರು. ನಾಯ್ಡು ಆಗ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು, ಎಂದು ರಮೇಶ್ ತಿಳಿಸಿದ್ದಾರೆ. ಭಾರತೀಯ ಪಕ್ಷಗಳ ಬೇಡಿಕೆಯೆಂದರೆ, ಸೂಚಿಸಲಾದ ವಿವಿ ಪ್ಯಾಟ್‍ಗಳ ಸಂಖ್ಯೆಯು ಸ್ಥಿರವಾಗಿರಬಾರದು ಆದರೆ 100 ಪ್ರತಿಶತದ ಕಡೆಗೆ ಸ್ಥಿರವಾಗಿ ಹೆಚ್ಚಾಗಬೇಕು ಎಂದು ಅವರು ಪ್ರತಿಪಾದಿಸಿದರು.
6
+ ಆದರೆ ಸಹಜವಾಗಿ, ನಾಯ್ಡು ಅವರು ಈ ಮಧ್ಯೆ ಎನ್‍ಡಿಎಗೆ ವಲಸೆ ಹೋಗಲಿದ್ದಾರೆ. ಬಹುಶಃ ಅವರು ತಮ್ಮ ಹಿಂದಿನ ಮಿತ್ರಪಕ್ಷಗಳಿಗೆ ಅಪಾಯಿಂಟ್‍ಮೆಂಟ್ ನೀಡಲು ಚುನಾವಣಾ ಆಯೋಗಕ್ಕೆ ಮನವರಿಕೆ ಮಾಡಬಹುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಚಾಯಿಸಿದ್ದಾರೆ.
eesanje/url_46_239_4.txt ADDED
@@ -0,0 +1,5 @@
 
 
 
 
 
 
1
+ ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ
2
+ ಬೆಂಗಳೂರು,ಫೆ.14- ನಿನ್ನೆ ರಾತ್ರಿ ಬಸವೇಶ್ವರನಗರದ ಪದ್ಮರಾಜ್ ಎಂಬುವರು ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದಲ್ಲದೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಮಾಜಿ ಸಚಿವ ಕೆ.ಗೋಪಾಲಯ್ಯ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೂ ದೂರು ನೀಡಿದ್ದೇನೆ.
3
+ ಪದ್ಮರಾಜ್ ಎಂಬುವರು ಅತ್ಯಂತ ಕೆಟ್ಟ ಪದಗಳಿಂದ ನನ್ನನ್ನು ನಿಂದಿಸಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರ ಬಳಿಯೂ ಮಾತನಾಡಿದ್ದೇನೆ. ಈ ವಿಚಾರವನ್ನು ಸದನದಲ್ಲಿ ಚರ್ಚಿಸಲು ಅವಕಾಶ ಕೋರಿರುವುದಾಗಿ ಹೇಳಿದರು. ಪದ್ಮರಾಜ್ ಎಂಬುವರು ಮಾಜಿ ಪಾಲಿಕೆ ಸದಸ್ಯರಾಗಿದ್ದು, ತಮಗೆ ಹಳೆ ಪರಿಚಯ.
4
+ ಪ್ರಧಾನಿ ಮೋದಿ ಇಲ್ಲದಿದ್ದರೆ ನಾನು ನನ್ನ ಕುಟುಂಬ ಸೇರುತ್ತಿರಲಿಲ್ಲ ; ವರ್ಮಾ
5
+ ಹಲವು ಬಾರಿ ನನ್ನಿಂದ ಅನುಕೂಲ ಮಾಡಿಕೊಂಡಿದ್ದಾರೆ. ನನಗೆ ಮಾತ್ರವಲ್ಲ, ಹಲವರಿಗೆ ಇದೇ ರೀತಿ ಬೆದರಿಕೆ ಹಾಕಿದ್ದಾರೆ. ಈ ವಿಚಾರವನ್ನು ಸಂಬಂಧಪಟ್ಟ ಎಸಿಪಿ, ಡಿಸಿಪಿಯವರಿಗೂ ತಿಳಿಸಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರಿಗೂ ಮಾಹಿತಿ ನೀಡಿರುವುದಾಗಿ ಅವರು ಹೇಳಿದರು.
eesanje/url_46_239_5.txt ADDED
@@ -0,0 +1,6 @@
 
 
 
 
 
 
 
1
+ ಕರ್ನಾಟಕ, ಆಂಧ್ರದಲ್ಲಿ ಶೋಧದ ವೇಳೆ 31 ಲಕ್ಷ ನಗದು ವಶ : ಇಡಿ
2
+ ನವದೆಹಲಿ, ಫೆ.13:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ನಡೆಸಿದ ಶೋಧದ ವೇಳೆ 31 ಲಕ್ಷ ರೂಪಾಯಿ ಮೌಲ್ಯದ ಲೆಕ್ಕಕ್ಕೆ ಸಿಗದ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ), 2002 ರ ನಿಬಂಧನೆಗಳ ಅಡಿಯಲ್ಲಿ ಸೂರ್ಯ ನಾರಾಯಣ ರೆಡ್ಡಿ ಮತ್ತು ಶಾಸಕ ಭರತ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
3
+ ಕರ್ನಾಟಕದ ಬಳ್ಳಾರಿಯಲ್ಲಿ ದಾಖಲಾಗಿದೆ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳುಗಳ ಹಿಂದೆ ಭರತ್ ರೆಡ್ಡಿ ಸುಮಾರು 42 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ ಮತ್ತು ಹಣವನ್ನು ಕಾನೂನುಬಾಹಿರ ವಹಿವಾಟು ಗಳಿಗೆ ಬಳಸಿದ್ದಾರೆ ಎಂಬ ದೋಷಪೂರಿತ ಪುರಾವೆಗಳನ್ನು ಸಂಸ್ಥೆಯು ಕಂಡುಕೊಂಡಿದೆ ಎಂದು ಅದು ಹೇಳಿದೆ.
4
+ ಬೆಂಗಳೂರಿಗೆ ಕುಡಿಯುವ ನೀರು ಕಾಯ್ದಿರಿಸಲಾಗುವುದು : ಡಿಕೆಶಿ
5
+ ಇಡಿ ನಡೆಸಿದ ಶೋಧ ಪ್ರಕ್ರಿಯೆಯಲ್ಲಿ ಆರೋಪಿಸುವ ದಾಖಲೆಗಳ ಜಾಲ, ವ್ಯವಹಾರ ದಾಖಲೆಗಳು ಮತ್ತು ಸ್ಥಿರ ಮತ್ತು ಚಲಿಸಬಲ್ಲ ಆಸ್ತಿಗಳ ವಿವರಗಳು ಕಂಡುಬಂದಿವೆ. 31 ಲಕ್ಷ ರೂ.ಗಳ ಲೆಕ್ಕಕ್ಕೆ ಸಿಗದ ನಗದು ಸಹಿತ ಮಹತ್ವದ ಸಾಕ್ಷ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಶಾಸಕ ಭರತ್ ರೆಡ್ಡಿ, ಅವರ ಸಹಾಯಕ ರತ್ನ ಬಾಬು ಮತ್ತು ಇತರರು ಅಕ್ರಮ ಪಾವತಿಗಾಗಿ ಗಣನೀಯ ಪ್ರಮಾಣದ ನಗದು ಸಂಗ್ರಹಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ಇಡಿ ತಿಳಿಸಿದೆ.
6
+ ಭರತ್ ರೆಡ್ಡಿಯ ಸಹೋದರನಾಗಿರುವ ಶರತ್ ರೆಡ್ಡಿ ವಿದೇಶಿ ಮೂಲದ ಕಂಪನಿಗಳಲ್ಲಿ ಅಘೋಷಿತ ಹೂಡಿಕೆ ಮಾಡಿರುವುದು ಇಡಿ ತನಿಖೆಯಲ್ಲಿ ಪತ್ತೆಯಾಗಿದೆ. ಆರೋಪಿಗಳು ಬೇನಾಮಿ ಹೆಸರಿನಲ್ಲಿ ಆಸ್ತಿಗಳಲ್ಲಿ ಹೂಡಿಕೆ ಮಾಡಿದ್ದಾರೆ ಮತ್ತು ಸಂಬಂಧಿಕರಿಂದ ಅನುಮಾನಾಸ್ಪದ ಸಾಲಗಳನ್ನು ಪಡೆದರು, ಅವರ ಬ್ಯಾಂಕ್ ಖಾತೆಗಳನ್ನು ಅವರಿಗೆ ತಿಳಿಯದೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ತಿಳಿಸಿದೆ.
eesanje/url_46_239_6.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ನಿರುದ್ಯೋಗದ ವಿರುದ್ಧ ಸಿಎಂ ವಾಗ್ದಾಳಿ
2
+ ಬೆಂಗಳೂರು, ಫೆ.13- ದೇಶದ ಯುವಜನರು ನಿರುದ್ಯೋಗದ ದಳ್ಳುರಿಯಲ್ಲಿ ಬೇಯುತ್ತಿದ್ದು, ಕಳೆದ ವರ್ಷಾಂತ್ಯದಲ್ಲಿ ಸಂಸತ್ತಿನ ಭದ್ರತೆಯನ್ನು ಭೇದಿಸಿ, ಒಳನುಸುಳಿ ಹೊಗೆಬಾಂಬ್ ಸಿಡಿಸುವ ಮಟ್ಟಿಗೆ ಹತಾಶರಾಗಿದ್ದ ಯುವಕರು ಕೂಡಾ ನಿರುದ್ಯೋಗಕ್ಕೆ ಬಲಿಯಾದವರಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
3
+ ದೇಶದ ನಿರುದ್ಯೋಗದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಕೇಂದ್ರ ಸರ್ಕಾರದ ಮುಂದೆ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. 2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು ನಿಜ ಹೇಳಿ ಪ್ರಧಾನಮಂತ್ರಿಗಳೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿದ್ದಾರೆ.
4
+ ಬೆಂಗಳೂರಿಗೆ ಕುಡಿಯುವ ನೀರು ಕಾಯ್ದಿರಿಸಲಾಗುವುದು : ಡಿಕೆಶಿ
5
+ ಕೇಂದ್ರ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು, 2022ರ ಜುಲೈ ನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ 2014-15 ಮತ್ತು 2021 -22ರ ಅವಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಅಂತಿಮ ಸತ್ಯ ಇದೇ ಇರಬಹುದಾ ಎಂದು ಲೇವಡಿ ಮಾಡಿದ್ದಾರೆ.
6
+ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸುವ ಪ್ರಧಾನಿ ನರೇಂದ್ರ ಮೋದಿಯವರು ಈಗ ತರಾತುರಿಯಿಂದ ಉದ್ಯೋಗ ಮೇಳಗಳನ್ನು ಆಯೋಜಿಸಲು ಕಾರಣ ಯುವಜನರ ಮೇಲಿನ ಕಾಳಜಿಯೇ, ಇಲ್ಲವೇ ಉದ್ಯೋಗ ಇಲ್ಲದೆ ರೊಚ್ಚಿಗೆದ್ದಿರುವ ನಿರುದ್ಯೋಗಿ ಯುವಜನರ ಆಕ್ರೋಶವೇ ? ಕೇಂದ್ರ ಸರ್ಕಾರದ ಅಕೃತ ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಮಾತಾಡುವುದಾದರೆ 2017-18ರ ಎನ್.ಎಸ್.ಎಸ್.ಒ ವರದಿಯ ಪ್ರಕಾರ ಕಳೆದ 45 ವರ್ಷಗಳಲ್ಲೇ ದೇಶದ ನಿರುದ್ಯೋಗ ಪ್ರಮಾಣ ಅತಿ ಗರಿಷ್ಠ ಮಟ್ಟಕ್ಕೆ, ಅಂದರೆ 6.1ಗೆ ತಲುಪಿದೆ. 2011-12ರಲ್ಲಿ ಈ ಪ್ರಮಾಣ ಶೇ 2.2 ಆಗಿತ್ತು ಎಂದು ವಿವರಿಸಿದ್ದಾರೆ.
7
+ ಕೋವಿಡ್ ಕಾಲದಲ್ಲಿ ನಿರುದ್ಯೋಗದ ಪ್ರಮಾಣ ಜಗತ್ತಿನಾದ್ಯಂತ ಹೆಚ್ಚಾಗಿದ್ದು ನಿಜ. ಆದರೆ ನಮ್ಮಲ್ಲಿ ಇದು 2014-15ರಿಂದಲೇ ಇದು ಪ್ರಾರಂಭವಾಗಿತ್ತು. 2016ರಲ್ಲಿ ನಡೆದ ನೋಟು ಅಮಾನ್ಯೀಕರಣದಿಂದ ಕೈಗಾರಿಕೆಗಳೆಲ್ಲ ಮುಚ್ಚಿಹೋಗಿ ನಿರುದ್ಯೋಗ ಪ್ರಮಾಣ ಮಿತಿ ಮೀರತೊಡಗಿದ್ದನ್ನು ಹಲವಾರು ಆರ್ಥಿಕ ತಜ್ಞರೇ ವಿವರಿಸಿ ಹೇಳಿದ್ದಾರೆ. ಈ ಕಾರಣಕ್ಕಾಗಿಯೇ, 2017-18ರ ಎನ್.ಎಸ್.ಎಸ್.ಒ ಸರ್ವೇಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ವಿಳಂಬ ಮಾಡಿತ್ತೇ ಎಂದು ಕೆಣಕಿದ್ದಾರೆ.
8
+ ವಿಶ್ವಬ್ಯಾಂಕ್ 2022ರಲ್ಲಿ ನೀಡಿದ್ದ ವರದಿ ಪ್ರಕಾರ ನಿರುದ್ಯೋಗದ ಪ್ರಮಾಣ ಪಾಕಿಸ್ತಾನದಲ್ಲಿ ಶೇ.11.3ರಷ್ಟಿದ್��ರೆ, ಬಾಂಗ್ಲಾದೇಶದಲ್ಲಿ 12.9ರಷ್ಟಿತ್ತು. ಭೂತಾನ್ ನಲ್ಲಿ ಶೇ. 14.4 ರಷ್ಟಿದ್ದರೆ, ಚೀನಾದಲ್ಲಿ 13.2ರಷ್ಟಿತ್ತು. ಆದರೆ, ಅದೇ ಅವಧಿಯಲ್ಲಿ ನಮ್ಮ ಭಾರತದಲ್ಲಿ ನಿರುದ್ಯೋಗ ದರ ಶೇ 23.22 ರಷ್ಟಿತ್ತು.ಇತ್ತೀಚೆಗೆ ಅಂತಾರಾಷ್ಟ್ರೀಯ ಲೇಬರ್ ಆರ್ಗನೈಸೆಷನ್ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ನಿರುದ್ಯೋಗದ ಪ್ರಮಾಣದಲ್ಲಿ ನಮ್ಮ ದೇಶ, ನೆರೆಯ ದೇಶಗಳಾದ ಮ್ಯಾನ್ಮರ್, ಬಾಂಗ್ಲಾ, ಮಾರಿಷಸ್ ಗಿಂತಲೂ ಕೆಳಗಿನ ಸ್ಥಾನದಲ್ಲಿದೆ.
9
+ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕನಾಮಿ ವರದಿ ಪ್ರಕಾರ ದೇಶದ ನಿರುದ್ಯೋಗ ಪ್ರಮಾಣ 2014ರಲ್ಲಿ ಶೇ.5.44ರಷ್ಟಿದ್ದು, 2023ರ ಅಕ್ಟೋಬರ್‍ನಲ್ಲಿ ಶೇ.10.05ರಷ್ಟು ತಲುಪಿದೆ. ಇನ್ನು ವಯಸ್ಸಿನ ಆಧಾರದಲ್ಲಿ ನೋಡೋದಾದ್ರೆ 20 ರಿಂದ 24ರ ವಯೋಮಾನ ಶೇ. 43.65ರಷ್ಟು ನಿರುದ್ಯೋಗಿಗಳಿದ್ದಾರೆ, 25 ರಿಂದ 29 ವಯೋಮಾನದವರಲ್ಲಿ ಶೇ.14.33ರಷ್ಟು, 30 ರಿಂದ 34 ವಯೋಮಾನದವರಲ್ಲಿ ಶೇ.2.49 ನಿರುದ್ಯೋಗಿಗಳಿದ್ದಾರೆ ಎಂದು ವಿವರಿಸಿದ್ದಾರೆ.
10
+ ಕೇಂದ್ರ ಸರ್ಕಾರವೇ ಪ್ರತಿ ಮೂರು ತಿಂಗಳಿಗೊಮ್ಮೆ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (ಪಿಎಲïಎಫ್ ಎಸ್) ಪ್ರಕಾರ 2019ರಿಂದ 2022ರವರೆಗಿನ ಅವಯಲ್ಲಿ ದೇಶದ ನಿರುದ್ಯೋಗ ಪ್ರಮಾಣ ಶೇ.22.9ರಷ್ಟು ಏರಿಕೆಯಾಗಿದೆ. ಏರಿಕೆಯಾಗಿರುವುದು ಉದ್ಯೋಗಗಳ ಸಂಖ್ಯೆ ಅಲ್ಲ, ಸುಳ್ಳುಗಳ ಸಂಖ್ಯೆ ಅಷ್ಟೆ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ. 2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ.
11
+ ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರ ಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿಧಿರೆ. ಕರ್ನಾಟಕವೊಂದರಲ್ಲೇ 2021ರಲ್ಲಿ 1,129 ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆಲ್ಲಿಯ ರೋಜಗಾರ್ ಮೇಳ ಎಂದು ಪ್ರಶ್ನಿಸಿದ್ದಾರೆ.
12
+ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ
13
+ ವಲಸೆ ಸಂಖ್ಯೆ ಹೆಚ್ಚಳ:ಉದ್ಯೋಗ ಅರಸಿ, ದೇಶದಿಂದ ವಿದೇಶಕ್ಕೆ ವಲಸೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಫ್ರಾನ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದ ಈ ವಿಮಾನದಲ್ಲಿ 66 ಮಂದಿ ಗುಜರಾತಿಗಳಿದ್ದರು. ತಮ್ಮನ್ನು ಗುಜರಾತಿನಿಂದ ಅಮೆರಿಕಾಗೆ ಅಕ್ರಮವಾಗಿ ಕರೆದೊಯ್ಯಲು ಏಜೆಂಟ್‍ಗಳಿಗೆ ತಲಾ 60 – 80 ಲಕ್ಷ ರೂಪಾಯಿಗಳನ್ನು ನೀಡಿದ್ದರು ಎಂಬ ಅಂಶ ವಿಚಾರಣೆಯಲ್ಲಿ ಬಹಿರಂಗವಾಗಿತ್ತು. 2018 ರಿಂದ 2019ರವರೆಗೆ 8,027 ಮಂದಿ, 2019 ರಿಂದ 2020ರ ವರೆಗೆ 19,883 ಮಂದಿ, 2020ರಿಂದ 2021ರ ವರೆಗೆ 30,662 ಮಂದಿ, 2021 ರಿಂದ 2022ರ ವರೆಗೆ 63,927 ಮಂದಿ ಭಾರತೀಯರು ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ.
14
+ ಈ ಅಕ್ರಮ ವಲಸಿಗರ ಪೈಕಿ ಬಹುಪಾಲು ಜನರು ಗುಜರಾತ್ ಮತ್ತು ಪಂಜಾಬ್ ರಾಜ್ಯಗಳಿಗೆ ಸೇರಿದವರು ಎ���ಬುದು ಗಮನಿಸಬೇಕಾದ ಅಂಶ ಎಂದು ಕಾಲೆಳೆದಿದ್ದಾರೆ. ಇದು ಹೊಸ ಉದ್ಯೋಗಗಳ ಸೃಷ್ಟಿಯ ಕಥೆಯಾದರೆ, ಇರುವ ಸರ್ಕಾರಿ ಉದ್ಯೋಗಗಳ ಭರ್ತಿಯಲ್ಲೂ ತೀರಾ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ವಿವಿಧ ಇಲಾಖೆಯ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಸಣ್ಣಪುಟ್ಟ ಹುದ್ದೆಗಳಿಗೂ ಸ್ನಾತಕೋತ್ತರ ಪದವೀಧರ, ಬಿಇ, ಎಂಬಿಬಿಎಸ್ ಪದವಿ ಪಡೆದವರು ಅರ್ಜಿ ಸಲ್ಲಿಸುವ ವಿದ್ಯಮಾನ ಇತ್ತೀಚೆಗೆ ಸಾಮಾನ್ಯವಾಗುತ್ತಿದೆ.ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉದ್ಯೋಗ ಭರ್ತಿಗಾಗಿ ಸರ್ಕಾರಗಳು ನಿರ್ದಿಷ್ಟ ನೇಮಕಾತಿ ಪ್ರಕ್ರಿಯೆ ನಡೆಸುತ್ತವೆ.
15
+ ಇದಕ್ಕಾಗಿಯೇ ಯುಪಿಎಸ್ಸಿ, ಎಸ್‍ಎಸ್ಸಿ, ಲೋಕಸೇವಾ ಆಯೋಗಗಳಿವೆ. ಹೀಗಿರುವಾಗ ಸಾಕ್ಷಾತ್ ಪ್ರಧಾನಿ ಯವರೇ ವೀಡಿಯೋ ಕಾನರೆನ್ಸ್ ಮೂಲಕ ನೇಮಕಾತಿ ಪತ್ರಗಳ ವಿತರಿಸುತ್ತಿರುವುದು ಯಾವ ಉದ್ಯೋಗಗಳಿಗೆ? ರೋಜ್‍ಗಾರ್ ಮೇಳದಲ್ಲಿ ನೀಡಲಾಗುತ್ತಿರುವ ಉದ್ಯೋಗಗಳು ಯಾವುದು? ಇವುಗಳು ಖಾಯಂ ಉದ್ಯೋಗವೇ? ತಾತ್ಕಾಲಿಕವೇ? ಅರೆಕಾಲಿಕವೇ? ಪೂರ್ಣಕಾಲಿಕವೇ? ಈ ಉದ್ಯೋಗಗಳನ್ನು ನೀಡುವಾಗ ಮೀಸಲಾತಿಯನ್ನು ಅನುಸರಿಸಲಾಗಿ ದೆಯೇ? ಅರ್ಹತೆಗಷ್ಟೇ ಪ್ರಾಮುಖ್ಯ ನೀಡಲಾಗಿದೆಯೇ? ರಾಜಕೀಯ ಒಲವು -ನಿಲುವುಗಳನ್ನು ಪರಿಗಣಿಸ ಲಾಗಿತ್ತೆ ಎಂದು ಉತ್ತರಿಸುವಂತೆ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ.
eesanje/url_46_239_7.txt ADDED
@@ -0,0 +1,3 @@
 
 
 
 
1
+ ಎನ್‍ಓಸಿ ಪತ್ರಕ್ಕೆ ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
2
+ ಬೆಂಗಳೂರು,ಫೆ.13:ಪೆಟ್ರೋಲ್ ಬಂಕ್‍ಗೆ ಎನ್‍ಓಸಿ ಪ್ರಮಾಣ ಪತ್ರ ನೀಡಲು 30 ಸಾವಿರ ರೂ ಲಂಚ ಪಡೆಯುತ್ತಿದ್ದ ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಿಕ್ಖಬಳ್ಳಾಪುರ ಜಿಲ್ಲೆ ಚಿಂತಾಮಣಿಯ ದೊಡ್ಢಗಂಜೂರ್‍ನಲ್ಲಿ ಪೆಟ್ರೋಲ್ ಬಂಕ್ ಆರಂಭಿಸುತ್ತಿದ್ದ ಎನ್.ವಿ.ಶ್ರೀನಾಥ್ ಅವರು ಎನ್‍ಓಸಿ ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದ್ದರು.
3
+ ಈ ವೇಳೆ ಮಂಡಳಿಯ ದ್ಚಿತೀಯ ದರ್ಜೆ ಅಧಿಕಾರಿ ಖಚಾ ವಾಳಿ (53) ಅವರು 30 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು.ಇದನ್ನು ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಬೆಳಿಗ್ಗೆ ಲಂಚದ ಹಣ ಪಡೆಯುವಾಗ ಇನ್ಸ್‍ಪೆಕ್ಟರ್ ಮೋಹನ್ ಕುಮಾರ್ ನೇತೃತ್ವದಲ್ಲಿ ಸಿಬ್ಭಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಅದಿಕಾರಿ ಖಚಾ ವಾಳಿ ಅವರು ಲಂಚದ ಹಣ ಸಮೇತ ರೆಡ್‍ಹಾಂಡ್‍ಆಗಿ ಸಿಕ್ಕಿಬಿದ್ದಿದ್ದಾರೆ
eesanje/url_46_239_8.txt ADDED
@@ -0,0 +1,7 @@
 
 
 
 
 
 
 
 
1
+ ಬೆಂಗಳೂರಿಗೆ ಕುಡಿಯುವ ನೀರು ಕಾಯ್ದಿರಿಸಲಾಗುವುದು : ಡಿಕೆಶಿ
2
+ ಬೆಂಗಳೂರು., ಫೆ.13- ಬೆಂಗಳೂರು ಮಹಾನಗರಕ್ಕೆ ಕಾವೇರಿಯಿಂದ ಬಳಕೆ ಮಾಡಿಕೊಳ್ಳಲು ಅಗತ್ಯ ನೀರು ಕಾಯ್ದಿರಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ತಮ್ಮ ಕ್ಷೇತ್ರದ ಜಯನಗರದಲ್ಲಿರುವ ಕೊಳಚೆ ಪ್ರದೇಶದಲ್ಲಿ ಎರಡುವರೆ ಸಾವಿರ ಮನೆಗಳಿವೆ. ಅಲ್ಲಿ ಮನೆ ನಿರ್ಮಿಸಿಕೊಡಲಾಗಿದೆ, ಆದರೆ ಕುಡಿಯುವ ನೀರು ಪೂರೈಕೆ ಸೌಲಭ್ಯ ಇಲ್ಲ. ಕಾವೇರಿಯಿಂದ ನೀರು ಪೂರೈಕೆ ಮಾಡಿ, ಆರಂಭಿಕ ಸಂಪರ್ಕಕ್ಕೆ ವೆಚ್ಚವಾಗುವ ನಾಲ್ಕು ಕೋಟಿ ರೂಪಾಯಿಗಳನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು.
3
+ ಉತ್ತರಿಸಿದ ಡಿ.ಕೆ.ಶಿವಕುಮಾರ್, 2017ರಿಂದ ಈ ಸ್ಲಂಗೆ ಉಚಿತವಾಗಿ ನೀರು ಪೂರೈಸಲಾಗುತ್ತಿದೆ. ಜಯನಗರದಲ್ಲಿ ನಿರ್ಮಾಣವಾಗಿರುವ ಫ್ಲಾಟ್‍ಗಳಿಗೆ ಬೋರ್ ವೆಲ್‍ನಿಂದ ನೀರು ಪೂರೈಸಲಾಗುತ್ತಿದೆ ಎಂದರು. ಕಾವೇರಿಯಿಂದ ಆರು ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದೆ. ಒಟ್ಟು ನೀರಿನ ಮೀಸಲು ಪ್ರಮಾಣದಿಂದ 1.5 ಟಿಎಂಸಿ ಹೆಚ್ಚುವರಿಯಾಗಿ ಉಳಿಯಲಿದೆ ಎಂದು ತಿಳಿಸಿದರು.
4
+ ಶಾಸಕರ ಪ್ರದೇಶಾಭಿವೃದ್ಧಿಗೆ ಐದು ಕೋಟಿ ರೂಪಾಯಿಗಳನ್ನು ನೀಡುತ್ತೇನೆ. ಅದನ್ನು ಖರ್ಚು ಮಾಡಿ ಜಯನಗರ ಸ್ಲಂಗೆ ಉಚಿತ ನೀರಿನ ಸಂಪರ್ಕ ಕಲ್ಪಿಸಿ ಎಂದು ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು. ಶಾಸಕರು ಆಗಬಹುದು ಎಂದು ಒಪ್ಪಿಕೊಂಡರು. ಮಧ್ಯ ಪ್ರವೇಶಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಜಾಣತನದಿಂದ ಉತ್ತರ ಹೇಳಬೇಡಿ, ರಾಮಮೂರ್ತಿ ಹೊಸದಾಗಿ ಶಾಸಕರಾಗಿದ್ದಾರೆ. ಶಾಸಕರ ಪ್ರದೇಶಾಭಿವೃದ್ದಿಗೆ ನೀಡುವ ಅನುದಾನ ಬೇರೆ, ಅದನ್ನು ನೀರಿನ ಸಂಪರ್ಕಕ್ಕೆ ಬಳಕೆ ಮಾಡಿಕೊಳ್ಳಲು ಹೇಗೆ ಸಾಧ್ಯ. ಶಾಸಕರನ್ನು ದಾರಿ ತಪ್ಪಿಸಬೇಡಿ. ನೀರಿನ ಸಂಪರ್ಕಕ್ಕೆ ತಗುಲುವ ವೆಚ್ಚವನ್ನು ಬಿಬಿಎಂಪಿಯಿಂದ ಪ್ರತ್ಯೇಕವಾಗಿ ಭರಿಸಲಿ ಎಂದು ಆಗ್ರಹಿಸಿದರು. ಅಶೋಕ್ ಅವರ ಮಧ್ಯ ಪ್ರವೇಶಕ್ಕೆ ಡಿ.ಕೆ.ಶಿವಕುಮಾರ್ ನಕ್ಕು ಸುಮ್ಮನಾದರು.
5
+ ಮೇನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ : 100ಕ್ಕೆ 100 ಅಂಕ ಪಡೆದ 23 ವಿದ್ಯಾರ್ಥಿಗಳು
6
+ ಬಿಜೆಪಿ ಶಾಸಕ ಅರವಿಂದ ಬೆಲ್ಲದ್, ಬೆಂಗಳೂರಿನಲ್ಲಿ ಟ್ಯಾಂಕರ್‍ಗಳಲ್ಲಿ ಪೂರೈಸಲು ಸಾಕಷ್ಟು ನೀರು ಲಭ್ಯ ಇದೆ. ಆದರೆ ಜನರಿಗೆ ಪೂರೈಸಲು ನೀರು ಸಿಗುತ್ತಿಲ್ಲ. ಈ ವಿಚಾರವೇ ಅರ್ಥವಾಗುತ್ತಿಲ್ಲ. ಡಿ.ಕೆ.ಶಿವಕುಮಾರ್ ಪ್ರಭಾವಿಯಾಗಿದ್ದಾರೆ. ಟ್ಯಾಂಕರ್ ಲಾಬಿಯನ್ನು ಮಟ್ಟ ಹಾಕಲಿ ಎಂದು ಸಲಹೆ ನೀಡಿದರು.
7
+ ಬೆಂಗಳೂರಿನ ನೀರಿನ ವಿಚಾರದಲ್ಲಿ ಏನೇಲ್ಲೇ ನಡೆಯುತ್ತದೆ ಎಂದು ಅಕ್ಕಪಕ್ಕ ಕುಳಿತ ಆರ್.ಅಶೋಕ್ ಮತ್ತು ಸುರೇಶ್ ಕುಮಾರ್‍ರನ್ನು ಕೇಳಿ ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದ ಡಿ.ಕೆ.ಶಿವಕುಮಾರ್, ಬೆಂಗಳೂರಿನ ನೀರಿನ ಬೇಡಿಕೆಯನ್ನೂ ಈಡೇರಿಸಲು ನಾವು ಮೇಕೆದಾಟು ಯೋಜನೆ ರೂಪಿಸಿದ್ದೇವೆ. ಅದರ ಅಂಗೀಕಾರಕ್ಕೆ ಬಿಜೆಪಿ ಸದಸ್ಯರು ಸಹಕಾರ ನೀಡಲಿ ಎಂದು ಮನವಿ ಮಾಡಿದರು. ವಿಚಾರವನ್ನು ಎಲ್ಲಿಂದ ಎಲ್ಲಿಗೆ ಸಂಪರ್ಕ ಮಾಡುತ್ತೀರಾ ಎಂದು ಅರವಿಂದ ಬೆಲ್ಲದ್ ಚೇಡಿಸಿದರು.
eesanje/url_46_239_9.txt ADDED
@@ -0,0 +1,6 @@
 
 
 
 
 
 
 
1
+ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ
2
+ ಬೆಂಗಳೂರು, ಫೆ.13- ವಾಣಿಜ್ಯ ಹಾಗೂ ಇತರೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕ ಮಂಡಿಸಿದರು. ಈ ಮೂಲಕ ರಾಜ್ಯಪಾಲರಿಂದ ತಿರಸ್ಕøತಗೊಂಡಿದ್ದ ಸುಗ್ರೀವಾಜ್ಞೆಗೆ ಕಾನೂನಿನ ರೂಪ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
3
+ ಕನ್ನಡ ನಾಮಫಲಕಗಳ ಕುರಿತು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಸಂಘಟನೆ ಉಗ್ರ ಸ್ವರೂಪದ ಹೋರಾಟ ನಡೆಸಿತ್ತು. ಪರಿಸ್ಥಿತಿಯ ಗಂಭೀರತೆ ಅರಿತ ಸರ್ಕಾರ ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗುವಂತೆ ಮಾಡಲು ಮುಂದಾಗಿತ್ತು. ಆದರೆ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿ ವಿಧಾನಮಂಡಲದಲ್ಲಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆದುಕೊಳ್ಳುವಂತೆ ಸೂಚಿಸಿದ್ದರು. ಅದರಂತೆ ಮಸೂದೆ ರೂಪಿಸಲಾಗಿದೆ.
4
+ ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್
5
+ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳು ಮತ್ತು ಮುಂದಾದೆಡೆಗಳಲ್ಲಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ, ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.
6
+ ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಟಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ.
eesanje/url_46_23_1.txt ADDED
@@ -0,0 +1,7 @@
 
 
 
 
 
 
 
 
1
+ ಒಳ ಮೀಸಲಾತಿ ಜಾರಿಯಾಗದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
2
+ ಬೆಂಗಳೂರು, ಸೆ.9; ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಷ್ಟರ ಮೀಸಲಾತಿಯಲ್ಲಿ, ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯಾಧ್ಯಂತ ಭಾರಿ ಪ್ರತಿಭಟನೆ ನಡೆಸಲಾಯಿತು ಇದಕ್ಕೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ 5 ಲಕ್ಷಕ್ಕೂ ಹೆಚ್ಚು ಪ್ರತಿಭಟನಾಕಾರರಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯದ್ಯಕ್ಷ ಎನ್ ಮೂರ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
3
+ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ರಾಜ್ಯಾಧ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಬೃಹತ್ ಪ್ರತಿಭಟನಾ ಮೆಟವಣಿಗೆಗೆ ಮತ್ತು “ತಮಟೆ ಚಳುವಳಿ” ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
4
+ ಮೀಸಲಾತಿಯ ಸೌಲಭ್ಯಗಳು ಪರಿಶಿಷ್ಟ ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ, ಪರಿಶಿಷ್ಟ ಜಾತಿಗಳಲ್ಲಿ ಅಸ್ಪೃಶ್ಯತೆ ಕೆಳ ಸಮುದಾಯಗಳಾದ ಇತರೇ ಉಪಜಾತಿಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಈ ಸಮುದಾಯಗಳು ಸಹಸ್ರಾರು ವರ್ಷಗಳಿಂದ ತೀರ ಹಿಂದುಳಿದಿದ್ದು, ಅಸ್ಪೃಶ್ಯತೆ, ನಿರುದ್ಯೋಗ, ಬಡತನದ ಬೇಗೆಯಲ್ಲಿ ಬೆಂದು ಬಸವಳಿದಿದ್ದಾರೆ. ಸಂವಿಧಾನದ ಆಶಯದ ಸಾಮಾಜಿಕ ನ್ಯಾಯದಿಂದ ವಂಚಿತವಾಗಿದೆ ಎಂದರು.
5
+ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ರಾಜ್ಯಸರ್ಕಾರಗಳಿಗೆ ಸಂವಿಧಾನ ಬದ್ಧ ಅಧಿಕಾರವಿದೆ ಎಂದು ತೀರ್ಪು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ತೀರ್ಪು ಬಂದು 40 ದಿನಗಳಾದರು ಸಹ ಕೋರ್ಟ್ ಆದೇಶಗಳನ್ನು ಜಾರಿ ಮಾಡಿಲ್ಲ. ರಾಜ್ಯ ಸರ್ಕಾರ “ತಟಸ್ಥ ನಿಲುವು” ತಾಳಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ದೂರಿದರು.
6
+ ಕೇಂದ್ರಸರ್ಕಾರ ಪರಿಶಿಷ್ಟ ಜಾತಿಗಳಿಗೆ ಕೆನೆಪದರ ಮೀಸಲಾತಿ ಅಳವಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇದಕ್ಕೆ ನಾವು ಆಸ್ಪದ ಕೊಡುವುದಿಲ್ಲ. ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿದು ಮೀನಾಮೇಷ ಎಣಿಸದೆ ಯಾವುದೆ ವಿಳಂಬ ನೀತಿ ಅನುಸರಿಸದೆ, ಈ ಕೂಡಲೆ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅನುಷ್ಠಾನಗೊಳಿಸಲು ದ.ಸಂ.ಸ ಆಗ್ರಹಿಸಿದೆ.
7
+ ಮತ್ತಷ್ಟು ವಿಳಂಬ ಮಾಡಿದ್ದಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ 5 ಲಕ್ಷ ಜನ ಸೇರಿಸಿ “ವಿಧಾನಸೌಧಕ್ಕೆ” ಮುತ್ತಿಗೆ ಹಾಕಲಾಗುವುದು. ಹಾಗೂ ರಾಜ್ಯಾಧ್ಯಂತ ಇಂದಿನಿಂದಲೇ ಜನಾಂದೋಲನ ಕಾರ್ಯಕ್ರಮ ನಡೆಸಲಾಗುವುದು ಎಂದರು
eesanje/url_46_23_10.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಸಿಎಂ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ, ಈಗ ಮುಂದಿನ ಮುಖ್ಯಮಂತ್ರಿ ಕುರಿತು ಚರ್ಚೆ ಅನಗತ್ಯ : ಪರಮೇಶ್ವರ್‌
2
+ , :
3
+ ಬೆಂಗಳೂರು,ಸೆ.9-ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಮುಂದಿನ ಮುಖ್ಯಮಂತ್ರಿಯ ಕುರಿತು ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಹಂತದಲ್ಲಿರುವುದು ನಿಜ. ಅಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಎಲ್ಲದಕ್ಕೂ ಮೊದಲೇ ಮುಂದಿನ ಮುಖ್ಯಮಂತ್ರಿ ಕುರಿತು ಚರ್ಚೆ ಮಾಡುವ ಅಗತ್ಯ ಸದ್ಯಕ್ಕಂತೂ ನನಗೆ ಕಾಣಿಸುತ್ತಿಲ್ಲ ಎಂದು ಹೇಳಿದರು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರು ನೀಡಿರುವ ಅಭಿಯೋಜನೆಗೆ ಪೂರ್ವಾನುಮತಿಗೆ ತಡೆಯಾಜ್ಞೆ ಕೋರಿ ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಅದರ ವಾದ ಇಂದು ಮುಂದುವರೆಯಲಿದೆ. ಅಡ್ವೊಕೇಟ್‌ ಜನರಲ್‌ ಹಾಗೂ ಇತರ ವಕೀಲರು ತಮ ವಾದವನ್ನು ಮುಂದುವರೆಸಲಿದ್ದಾರೆ. ಇತ್ತೀಚಿನ ವಿಚಾರಣೆಯಲ್ಲಿ ನ್ಯಾಯಾಧೀಶರು 12ನೇ ತಾರೀಕಿನೊಳಗೆ ಪ್ರಕರಣವನ್ನು ಇತ್ಯರ್ಥಪಡಿಸುವುದಾಗಿ ತಿಳಿಸಿದ್ದಾರೆ ಎಂದರು.
5
+ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಅವರ ಪಕ್ಷದಲ್ಲಿರುವ ಭಿನ್ನಮತಗಳನ್ನು ಮೊದಲು ನೋಡಿಕೊಳ್ಳಲಿ, ನಮ ಪಕ್ಷದ ವಿಚಾರವಾಗಿ ಅವರೇಕೆ ತಲೆ ಕೆಡಿಸಿಕೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
6
+ ಇತ್ತೀಚೆಗೆ ಎತ್ತಿನಹೊಳೆ ಯೋಜನೆ ಉದ್ಘಾಟನೆಯ ದಿನ ನಾನು ಮತ್ತು ಸಚಿವ ಎಂ.ಬಿ.ಪಾಟೀಲ್‌ ಹಾಸನಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರೂ ಜೊತೆಯಲ್ಲಿ ತೆರಳುವ ಕುರಿತು ಮಾತನಾಡಿಕೊಂಡಿದ್ದೆವು. ನಮ ಮನೆಗೆ ಉಪಹಾರಕ್ಕೆ ಬನ್ನಿ ಎಂದು ಎಂ.ಬಿ.ಪಾಟೀಲ್‌ ಆಹ್ವಾನ ನೀಡಿದ್ದರು. ಹೀಗಾಗಿ ನಾನು, ಅವರು ತಿಂಡಿ ತಿಂದು ಮುಖ್ಯಮಂತ್ರಿಯವರು ಮನೆಬಿಟ್ಟ ತಕ್ಷಣವೇ ನಾವೂ ಜೊತೆಯಲ್ಲಿಯೇ ಹೋಗಿದ್ದೇವೆ. ಅದರಲ್ಲಿ ರಾಜಕೀಯ ವಿಚಾರಗಳೇನೂ ಇಲ್ಲ. ಅನಗತ್ಯವಾಗಿ ಇಂತಹುದನ್ನು ದೊಡ್ಡದು ಮಾಡುವ ಅಗತ್ಯವಿಲ್ಲ ಎಂದರು.
7
+ ╰┈➤
8
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕುಟುಂಬ ಸಮೇತರಾಗಿ ಅಮೆರಿಕಾಕ್ಕೆ ಖಾಸಗಿ ಪ್ರವಾಸ ತೆರಳಿದ್ದಾರೆ. ಅದು ಸರ್ಕಾರದಿಂದ ಪ್ರಾಯೋಜಿತವಾದ ಪ್ರವಾಸವಲ್ಲ. ಅವರ ಪ್ರವಾಸದ ಬಗ್ಗೆ ಕಾಂಗ್ರೆಸ್‌‍ ಸಭೆಯಲ್ಲೂ ಮಾಹಿತಿ ನೀಡಿದ್ದರು ಎಂದು ಹೇಳಿದರು.
9
+ ಮುಡಾ ಪ್ರಕರಣದಿಂದ ರಾಜ್ಯಸರ್ಕಾರದ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಎಲ್ಲಾ ಸಚಿವರೂ ಆಯಾ ಇಲಾಖೆಗಳ ಕಾರ್ಯಕಲಾಪಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಯವರು ತಮ ಪಾಲಿನ ಜವಾಬ್ದಾರಿಯನ್ನ ನಿಭಾಯಿಸುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಇರುವುದರಿಂದ ಮುಖ್ಯಮಂತ್ರಿಯವರು ತಮ ಕಲಾಪಗಳನ್ನು ನಿಲ್ಲಿಸಿರಬಹುದು. ಉಳಿದಂತೆ ಎಲ್ಲಾ ಆಡಳಿತ ವ್ಯವಸ್ಥೆ ಮುಂದುವರೆದಿದೆ ಎಂದರು.
10
+ ಕಲಬುರಗಿಯಲ್ಲಿ ಕೃಷಿ ಇಲಾಖೆಯ ಅಧಿಕಾರಿಯೊಬ್ಬರ ಆತಹತ್ಯೆ ಯತ್ನಕ್ಕೂ ಮುನ್ನ ಬರೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು. ವರ್ಗಾವಣೆಗೆ ಯಾರು ಹಣ ಕೇಳುತ್ತಿದ್ದಾರೆ ಎಂಬ ಕುರಿತು ವಿಚಾರಣೆಯಾಗಲಿದೆ ಎಂದು ಹೇಳಿದರು.
11
+ ಎತ್ತಿನಹೊಳೆ ಯೋಜನೆಯ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದೆ. ಪರಿಸರದ ವಿಚಾರ ಬಂದಾಗ ಆ ಕುರಿತು ಕಾಳಜಿ ವಹಿಸಲಾಗುತ್ತದೆ. ರಾಜ್ಯಸರ್ಕಾರದ ಅಧಿಕಾರಿಗಳು ಸೂಕ್ತ ಉತ್ತರವನ್ನು ನೀಡಲಿದ್ದಾರೆ. ಪರಿಸರ ನಾಶ ಮಾಡದೇ ಈವರೆಗೂ ಕೆಲಸ ನಿರ್ವಹಿಸಲಾಗಿದೆ ಎಂದರು.
12
+ ನಟ ದರ್ಶನ್‌ ಮತ್ತು ಅವರ ಸಹ ಖೈದಿಗಳು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಯಾವ ತೀರ್ಪು ನೀಡುತ್ತದೆ ಎಂಬುದನ್ನು ಕಾದುನೋಡುತ್ತೇವೆ ಎಂದು ಹೇಳಿದರು.
13
+ ಯುವಕಾಂಗ್ರೆಸ್‌‍ನ ಚುನಾವಣೆಯಲ್ಲಿ ಸ್ಪರ್ಧಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಸಚಿವರು, ಶಾಸಕರ ಮಕ್ಕಳು ಸಮರ್ಥವಾಗಿದ್ದರೆ ಆಯ್ಕೆಯಾಗುತ್ತಾರೆ. ಇಲ್ಲವಾದರೆ ಕಾರ್ಯಕರ್ತರು ಮನೆಗೆ ಕಳುಹಿಸುತ್ತಾರೆ. ಅರ್ಜಿ ಹಾಕಿದವರು ಸಚಿವರ ಮಕ್ಕಳು ಎಂಬ ಕಾರಣಕ್ಕೆ ಆಯ್ಕೆಯಾಗುವುದಿಲ್ಲ ಎಂದರು.
eesanje/url_46_23_11.txt ADDED
@@ -0,0 +1,19 @@
 
 
 
 
 
 
 
 
 
 
 
 
 
 
 
 
 
 
 
 
1
+ ಚನ್ನಪಟ್ಟಣ ಉಪಚುನಾವಣೆ : ಬಿಜೆಪಿ-ಜೆಡಿಎಸ್‌‍ನಲ್ಲಿ ರಾಜಕೀಯ ಲೆಕ್ಕಾಚಾರ ಜೋರು
2
+
3
+ ಬೆಂಗಳೂರು,ಸೆ.9– ಒಕ್ಕಲಿಗ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಿರುವ ರಾಮನಗರ ಜಿಲ್ಲೆ ಚನ್ನಪಟ್ಟಣ ಉಪ ಚುನಾವಣೆಯ ಟಿಕೆಟ್‌ ವಿಚಾರದಲ್ಲಿ ಎನ್‌ಡಿಎ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌‍ನಲ್ಲಿ ರಾಜಕೀಯ ಲೆಕ್ಕಾಚಾರ ಜೋರಾಗಿಯೇ ನಡೆಯುತ್ತಿದೆ.
4
+ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಇಡೀ ರಾಜ್ಯದಲ್ಲಿಯೇ ಮನೆಮಾತಾಗಿದ್ದು, ದಿನಕಳೆದಂತೆ ಕದನ ಕುತೂಹಲ ಹೆಚ್ಚಾಗುತ್ತಿದೆ. ಉಪ ಚುನಾವಣೆಯ ರಣಕಣವೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ನಿರ್ಧಾರದ ಮೇಲೆ ನಿಂತಿದೆ.
5
+ ಎನ್‌ಡಿಎ ಅಭ್ಯರ್ಥಿಯಾಗಿಯೇ ನಾನು ಕಣಕ್ಕಿಳಿಯುತ್ತೇನೆ ಎಂದಿರು ಬಿಜೆಪಿ ವಿಧಾನಪರಿಷತ್‌ ಸದಸ್ಯರೂ ಆಗಿರುವ ಸಿ.ಪಿ.ಯೋಗೇಶ್ವರ್‌ ಅವರು, ಒಂದು ವೇಳೆ ಪಕ್ಷದ ಟಿಕೆಟ್‌ ಕೈತಪ್ಪಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ನಂತರ ದಿನಗಳಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇದು ಸಹಜವಾಗಿ ಎನ್‌ಡಿಎ ಮೈತ್ರಿಕೂಟವನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.
6
+ 2023ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ 80,677 ಮತಗಳನ್ನು ಪಡೆದು ಸೋಲು ಕಂಡಿದ್ದರು. ಕಾಂಗ್ರೆಸ್‌‍ ಅಭ್ಯರ್ಥಿ ಗಂಗಾಧರ್‌ ಎಸ್‌‍. ಕೇವಲ 15,374 ಮತ ಪಡೆದಿದ್ದರು.
7
+ ╰┈➤
8
+ ಚನ್ನಪಟ್ಟಣ ಉಪಚುನಾವಣೆಗೆ ಡಿಕೆ ಬ್ರದರ್ಸ್‌ ಅಚ್ಚರಿಯ ಅಭ್ಯರ್ಥಿ ಕಂಬಿ ಹಿಂದೆ ಇದ್ದಾರೆ, ಈ ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಗೆಲ್ಲಬೇಕು ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ತಂತ್ರ ರೂಪಿಸುತ್ತಿದ್ದಾರೆ. ಕ್ಷೇತ್ರಕ್ಕೆ ಪದೇ-ಪದೇ ಭೇಟಿ ನೀಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಕಂಡ ಡಿ. ಕೆ. ಸುರೇಶ್‌ ಚನ್ನಪಟ್ಟಣದಿಂದ ಕಣಕ್ಕಿಳಿಯಬಹುದು ಎಂಬ ಸುದ್ದಿಗಳು ಹಬ್ಬಿವೆ.
9
+ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಮುಂದುವರೆಯಲಿದೆಯೇ? ಹಾಗಾದರೆ ಮೈತ್ರಿಕೂಟದ ಅಭ್ಯರ್ಥಿ ಯಾರು?, ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿಯುವುದಿಲ್ಲವೇ? ಎಂಬ ಹಲವಾರು ಪ್ರಶ್ನೆಗಳಿವೆ.
10
+ ಈ ನಡುವೆ ಸಿಪಿ ಯೋಗೇಶ್ವರ್‌ ಅವರು ಕಾಂಗ್ರೆಸ್‌‍ಗೆ ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿಯೂ ಹರಿದಾಡತೊಡಗಿತು. ಚನ್ನಪಟ್ಟಣದಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿಯಲು ಪ್ರಯತ್ನ ನಡೆಸುತ್ತಿದ್ದ ಯೋಗೇಶ್ವರ್‌ಗೆ ಎಚ್‌ಡಿಕೆ ಅಡ್ಡಿಯಾಗಿದ್ದಾರೆ. ಹೀಗಾಗಿ ಅವರು ಟಿಕೆಟ್‌ ಸಿಗದೇ ಇದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದರು.
11
+ ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆಶಿ ಚನ್ನಪಟ್��ಣದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಆದರೆ ಈ ಹೇಳಿಕೆ ವಾಸ್ತವದಲ್ಲಿ ಎಷ್ಟರ ಮಟ್ಟಿಗೆ ಸಾಧ್ಯವಾಗಲಿದೆ ಎಂಬುವುದು ಕುತೂಹಲದ ಸಂಗತಿಯಾಗಿದೆ.ಈಗಾಗಲೇ ಕನಕಪುರ ಶಾಸಕರಾಗಿರುವ ಅವರು ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಗೆದ್ದರೆ ಎರಡು ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾದರಲ್ಲಿ ಅವರ ತಮ ಸ್ವಕ್ಷೇತ್ರಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಅಲ್ಲಿ ಮತ್ತೊಮೆ ಉಪ ಚುನಾವಣೆ ನಡೆಯಬೇಕು. ಹೀಗಾದಲ್ಲಿ ಇದು ತಪ್ಪು ಸಂದೇಶಗಳಿಗೆ ಆಸ್ಪದ ಕೊಡುತ್ತದೆ.
12
+ ಎಚ್‌ಡಿಕೆ ನಡೆ ಏನು? :ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿಗೆ ಮತದಾರರಿಂದ ಬೆಂಬಲ ವ್ಯಕ್ತವಾಗಿದೆ. ಫಲಿತಾಂಶದ ಮೂಲಕ ಬಿಜೆಪಿ ಹೈಕಮಾಂಡ್‌ ಖುಷಿಪಡಿಸಿರುವ ಎಚ್‌.ಡಿ.ಕುಮಾರಸ್ವಾಮಿಗೆ ಇದೀಗ ದಿಲ್ಲಿ ನಾಯಕರ ಮಧ್ಯದಲ್ಲಿ ಒಳ್ಳೆಯ ಸ್ಥಾನಮಾನ ಲಭಿಸಿದೆ. ತಾನು ರಾಜೀನಾಮೆ ನೀಡಿದ್ದ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದು ಎಚ್‌‍.ಡಿ.ಕುಮಾರಸ್ವಾಮಿಗೆ ಪ್ರತಿಷ್ಠೆಯ ಸಂಗತಿಯಾಗಿದೆ.
13
+ ತಮ ಸಾಂಪ್ರದಾಯಿಕ ಎದುರಾಳಿ ಯೋಗೇಶ್ವರ್‌ಗೆ ನಮ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಲಿ ಎಂದು ಕೆಲ ಜೆಡಿಎಸ್‌‍ ಕಾರ್ಯಕರ್ತರು ಸಹಮತ ವ್ಯಕ್ತಪಡಿಸುತ್ತಿದ್ದಾರಾದರೂ, ಯೋಗೇಶ್ವರ್‌ ವಿರುದ್ಧವಾಗಿ ರಾಜಕಾರಣ ಮಾಡಿಕೊಂಡು ಬಂದಿರುವ, ಅವರ ಜತೆಗಿನ ರಾಜಕೀಯ ಸಮಯದಲ್ಲಿ ಕೈಸುಟ್ಟುಕೊಂಡಿರುವ ಕೆಲ ಮುಖಂಡರಿಗೆ ಯೋಗೇಶ್ವರ್‌ಗೆ ಟಿಕೆಟ್‌ ನೀಡಲು ಇಷ್ಟವಿಲ್ಲ. ಹೀಗಾಗಿ ಅವರು ಕುಮಾರಸ್ವಾಮಿ ಮೇಲೆ ಒತ್ತಡ ಹಾಕುತ್ತಿದ್ದಾರೆ.
14
+ ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ವಿರೋಧವೇನೂ ಇಲ್ಲ. ಆದರೆ, ಅವಕಾಶ ಕೈತಪ್ಪಿದರೆ ಯೋಗೇಶ್ವರ್‌ ಯಾವ ಹೆಜ್ಜೆ ಇಡಬಹುದು ಎಂಬ ಬಗ್ಗೆ ಅಂದಾಜು ಮಾಡಿರುವ ಕುಮಾರಸ್ವಾಮಿ ಕಾರ್ಯಕರ್ತರಿಗೆ ಯೋಗೇಶ್ವರ್‌ ಒಪ್ಪಿಸಿಕೊಂಡು ಬನ್ನಿ ಎನ್ನುವ ಟಾಸ್ಕ್‌ ನೀಡುವ ಮೂಲಕ ಜಾಣ ನಡೆ ಇರಿಸಿದ್ದಾರೆ.
15
+ ತಂತ್ರಗಾರಿಕೆ :ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ಮತ್ತು ಬಿಜೆಪಿ ಮೈತ್ರಿಯಿಂದಾಗಿ 50 ಸಾವಿರಕ್ಕೂ ಹೆಚ್ಚು ಲೀಡ್‌ ಪಡೆಯಬೇಕಿದ್ದ ಎನ್‌ಡಿಎ ಅಭ್ಯರ್ಥಿಗೆ ದೊರೆತಿದ್ದು ಕೇವಲ 23 ಸಾವಿರ ಮತಗಳ ಮುನ್ನಡೆಯಷ್ಟೇ ಕಾಂಗ್ರೆಸ್‌‍ ಅಭ್ಯರ್ಥಿ 85 ಸಾವಿರ ಮತಗಳನ್ನು ಗಳಿಸಿದ್ದು ಮೈತ್ರಿ ನಾಯಕರನ್ನು ಚಿಂತೆಗೀಡು ಮಾಡಿದೆ.
16
+ ಕಳೆದ 20 ವರ್ಷಗಳಿಂದ ಜೆಡಿಎಸ್‌‍ ವಿರುದ್ಧವಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದ ಯೋಗೇಶ್ವರ್‌ ಇದೇ ಮೊದಲ ಬಾರಿಗೆ ಜೆಡಿಎಸ್‌‍ ಜತೆಗೆ ಕೈಜೋಡಿಸಿದ್ದಾರೆ. ಜೆಡಿಎಸ್‌‍ನ ಕಟ್ಟಾ ವಿರೋಧಿಯಾಗಿದ್ದ ಸೈನಿಕ ಮೈತ್ರಿ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆ ಉತ್ಸಾಹ ತೋರಿದ್ದರ ಹಿಂದೆ ಚನ್ನಪಟ್ಟಣವನ್ನು ಭದ್ರಮಾಡಿಕೊಳ್ಳುವ ತಂತ್ರಗಾರಿಕೆ ಇತ್ತು ಎಂಬುದನ್ನು ಯಾರೂ ಅಲ್ಲಗಳೆಯುವಂತಿಲ್ಲ.
17
+ ವಿರೋಧಿಗಳ ದಾರಿ ತಪ್ಪಿಸುವ ಪ್ರಯತ್ನವೇ? :ಡಿಕೆ ಶಿವಕುಮಾರ್‌ ಪದೇ ಪದೇ ಭಿನ್ನ ಹೇಳಿಕೆ ಕೊಡುವ ಮೂಲಕ ವಿರೋಧಿಗಳ ದಾರಿ ತಪ್ಪಿಸುತ್ತಿದ್ದಾರಾ? ಎಂಬ ಪ್ರಶ್ನೆಯೂ ಉದ್ಭವಿಸುತ್ತಿದೆ. ಆದರೆ ಅಸಲಿ ರಣತಂತ್ರ ಬೇರೆಯೇ ಇದೆ ಎಂಬ ಮಾತುಗಳು ಡಿಕೆಶಿ ಆಪ್ತ ವಲಯದಿಂದ ಕೇಳಿಬರುತ್ತಿದೆ. ಒಟ್ಟಿನಲ್ಲಿ ಡಿಕೆಶಿ ನಡೆಯಂತೂ ಕುತೂಹಲಕ್ಕೆ ಕಾರಣವಾಗಿದೆ.
18
+ ಕ್ಷೇತ್ರದಲ್ಲಿ ಈಗಾಗಲೇ ಅಂತೆ ಕಂತೆಗಳು ಸಾಕಷ್ಟು ಚರ್ಚೆಯಾಗುತ್ತಿದ್ದು, ಎಲ್ಲರ ಕೇಂದ್ರ ಬಿಂದುವಾಗಿ ಸಿಪಿವೈ ಕಾಣಿಸಿಕೊಳ್ಳುತ್ತಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕ ಮತ್ತೊಂದು ಸುತ್ತಿನ ಚುನಾವಣಾ ಕಾವು ಏರಿಕೆಯಾಗುತ್ತಿದೆ.
19
+ ಇದರ ನಡುವೆ ಚನ್ನಪಟ್ಟಣ ಜನತೆ ಮನಗೆಲ್ಲುವ ಸಲುವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಈಗಾಗಲೇ ಕ್ಷೇತ್ರದಾದ್ಯಂತ ಸುತ್ತಿ ಮತದಾರರ ಮುಟ್ಟುವ ಒಂದು ಹಂತದ ಕಸರತ್ತು ಮುಗಿಸಿದ್ದಾರೆ. ಪ್ರತಿ ಜಿಲ್ಲಾಪಂಚಾಯಿತಿ ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಜನಾಭಿಪ್ರಾಯ ಸಂಗ್ರಹಣೆಗೆ ಸಾಕಷ್ಟು ಒತ್ತು ನೀಡಿದ್ದಾರೆ. ಇದರ ನಡುವೆ ಕಾಂಗ್ರೆಸ್‌‍ನಿಂದ ಅಚ್ಚರಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕ್ಷೇತ್ರದ ರಣಕಣ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
eesanje/url_46_23_12.txt ADDED
@@ -0,0 +1,6 @@
 
 
 
 
 
 
 
1
+ ಚಾಲಕರ ಮಕ್ಕಳ ವಿದ್ಯಾನಿಧಿ ಯೋಜನೆಗೆ 2.65 ಕೋಟಿ ರೂ.
2
+ 2.65 .
3
+ ಬೆಂಗಳೂರು,ಸೆ.9-ಹಳದಿ ಫಲಕ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳ ಮೆಟ್ರಿಕ್‌ ನಂತರದ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸುವ ವಿದ್ಯಾನಿಧಿ ಯೋಜನೆಗೆ 2,65,65,000 ರೂ.ಗಳನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
4
+ ಸಾರಿಗೆ ಇಲಾಖೆ ಆಯುಕ್ತರ ಪ್ರಸ್ತಾವನೆಯನ್ನು ಪರಿಶೀಲಿಸಿ 2024-25ನೇ ಸಾಲಿಗೆ ವಿದ್ಯಾನಿಧಿ ಯೋಜನೆಗೆ ಈ ಹಣವನ್ನು ಬಿಡುಗಡೆ ಮಾಡಲಾಗಿದೆ.ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹದಡಿ 531.30 ಲಕ್ಷ ಅನುದಾನದಡಿಯಲ್ಲಿ 1 ಮತ್ತು 2ನೇ ಕಂತಿನ ಅನುದಾನವನ್ನು ಕೆಲವು ಷರತ್ತು ವಿಧಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
5
+ ಬಿಡುಗಡೆಯಾದ ಅನುದಾನದಿಂದ ವಿದ್ಯಾರ್ಥಿವೇತನ ಪಾವತಿಸಿರುವ ವಿವರವಾದ ಮಾಹಿತಿಯೊಂದಿಗೆ ಕಡ್ಡಾಯವಾಗಿ ಒದಗಿಸಬೇಕು.ಮುಂದಿನ ತ್ರೈಮಾಸಿಕ ಕಂತಿನ ಹಣ ಬಿಡುಗಡೆಗೂ ಮುನ್ನ ಈಗಾಗಲೇ ಬಿಡುಗಡೆಯಾಗಿರುವ ಅನುದಾನ ಬಳಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
6
+ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಬಿಡುಗಡೆಯಾದ ಅನುದಾನವನ್ನು ಇತರೆ ಕಾರ್ಯಕ್ರಮ ಅಥವಾ ಯೋಜನೆಗಳಿಗೆ ಬಳಸುವಂತಿಲ್ಲ ಎಂಬ ಷರತ್ತು ವಿಧಿಸಿ ಆದೇಶಿಸಲಾಗಿದೆ.
eesanje/url_46_23_3.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ 2026ರ ಅಂತ್ಯದೊಳಗೆ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಪೂರ್ಣ : ವಿ.ಸೋಮಣ್ಣ
2
+ 2026: .
3
+ ಬೆಂಗಳೂರು,ಸೆ.9-ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಕಾಮಗಾರಿಯನ್ನು 2026ರ ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.ವಿಧಾನಸೌಧದಲ್ಲಿಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಅವರೊಂದಿಗೆ ನಡೆದ ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು.
4
+ ಉಪನಗರ ರೈಲು ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣ ಮೀಸಲಿಟ್ಟಿದ್ದು, ಕೇಂದ್ರದ ಪಾಲಿನ ಹಣ ಬಿಡುಗಡೆಗೆ ಕ್ರಮ ವಹಿಸುವುದಾಗಿ ತಿಳಿಸಿದರು. ಪ್ರಧಾನಿ ನರೇಂದ್ರಮೋದಿ ಅವರು 148 ಕಿ.ಮೀ ಉಪನಗರ ರೈಲು ಯೋಜನೆಗೆ ಅಡಿಪಾಯ ಹಾಕಿದ್ದರು. ನಾವು ಈಗ 70 ಕಿ.ಮೀ ಉಪನಗರ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದೇವೆ ಎಂದರು.
5
+ ಬೈಯಪ್ಪನಹಳ್ಳಿ-ಚಿಕ್ಕಬಾಣವಾರದವರೆಗೆ 26 ಕಿ.ಮೀ ಹಾಗೂ ಈಲರಿ-ರಾಜಾನುಕುಂಟೆ ನಡುವೆ 48 ಕಿ.ಮೀ ಉದ್ದದ ಉಪನಗರ ರೈಲ್ವೆ ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ರೈಲ್ವೆ , ಮೆಟ್ರೋ, ಬಿಡಿಎ, ಕಂದಾಯ ಹಾಗೂ ಬಿಬಿಎಂಪಿ ನಡುವೆ ಸಮನ್ವಯದಿಂದ ಉಪನಗರ ರೈಲ್ವೆ ಮಾರ್ಗ ನಿರ್ಮಾಣದ ಕೆಲಸ ಸಾಗಲಿದೆ ಎಂದು ಸಚಿವರು ತಿಳಿಸಿದರು.
6
+ ಇನ್ನೆರಡು ವರ್ಷದಲ್ಲಿ ರೈಲ್ವೆ ಮಾರ್ಗಗಳ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ಪೂರ್ಣಗೊಳಿಸುವ ಗುರಿ ಹಾಕಿಕೊಂಡಿದ್ದೇವೆ. ತುಮಕೂರು-ಚಿತ್ರದುರ್ಗ ರೈಲ್ವೆ ಮಾರ್ಗವನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
7
+ ಚಿತ್ರದುರ್ಗ-ಕೊಪ್ಪಳ ಆಲಮಟ್ಟಿ ಮಾರ್ಗದ ಬಗ್ಗೆಯೂ ಚಿಂತನೆ ಇದೆ. ಚಾಮರಾಜನಗರಕ್ಕೂ ಹೊಸ ಯೋಜನೆ ತರುತ್ತಿದ್ದೇವೆ. ವಿಜಯಪುರ ಹಾಗೂ ಮಂಗಳೂರು ಬಂದರಿನ ಡಬ್ಲಿಂಗ್‌ ಲೈನ್‌ ಒಂದು ಹಂತಕ್ಕೆ ತರುತ್ತಿದ್ದೇವೆ ಎಂದು ಹೇಳಿದರು.
8
+ 50 ವರ್ಷಗಳಲ್ಲಿ ಆಗದ ಸಾಧನೆಯನ್ನು ಪ್ರಧಾನಿಯವರು ಮಾಡಿದ್ದಾರೆ. ಧಾರವಾಡ-ಚಿತ್ತೂರು ರೈಲ್ವೆ ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆ ಇದೆ. ಕೋಚ್‌ಗಳನ್ನು ಖರೀದಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಇನ್ನು ಮುಂದೆ ಭೂಸ್ವಾಧೀನ ಪ್ರಕ್ರಿಯೆಯು ರಾಜ್ಯ ಸರ್ಕಾರವೇ ಮಾಡಬೇಕಾಗುತ್ತದೆ ಎಂದು ಹೇಳಿದರು.
9
+ ತುಮಕೂರು-ರಾಯದುರ್ಗ ನಡುವಿನ 90 ಎಕರೆ ಭೂಸ್ವಾಧೀನ ಆಗಬೇಕಿದೆ. ನಮ ಕಾಲದಲ್ಲಿ ಪ್ರಾರಂಭವಾದ ಕೆಲಸಗಳನ್ನು ನಮ ಕಾಲದಲ್ಲೇ ಮುಗಿಸುತ್ತೇವೆ ಎಂದರು. ತ್ವರಿತವಾಗಿ ಪೂರ್ಣಗೊಳಿಸಿ: ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಸೋಮಣ್ಣ ಅವರು ಕಾಳಜಿ ವಹಿಸಿ ಉಪನಗರ ರೈಲು ಯೋಜನೆ ಸೇರಿದಂತೆ ರೈಲ್ವೆ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು.
10
+ ಮೆಟ್ರೋ, ಉಪನಗರ ರೈಲು ಒಂದಕ್ಕೊಂದು ಪೂರಕವಾಗಿರಬೇಕು. ಬೆಂಗಳೂರು-ತ��ಮಕೂರು ನಡುವೆ ಚತುಷ್ಪದವಾಗುತ್ತಿದೆ. ಚಿತ್ರದುರ್ಗ-ಹೊಸಪೇಟೆ ಆಲಮಟ್ಟಿ ಮಾರ್ಗದ ಬಗ್ಗೆ ಮಾಹಿತಿ ನೀಡಿದ್ದು, ಅದಕ್ಕೂ ಸ್ಪಂದನೆ ಕೊಟ್ಟಿದ್ದಾರೆ.
11
+ ವಿಜಯಪುರ-ಬೆಂಗಳೂರು ಪ್ರಯಾಣದ ಸಮಯ ಕಡಿಮೆ ಮಾಡಲು ಮನವಿ ಮಾಡಿದ್ದೇವೆ. ವಂದೇ ಭಾರತ್‌ ರೈಲನ್ನು ಹೆಚ್ಚಿಸಲು ಕೇಳಿದ್ದೇವೆ ಎಂದ ಅವರು, ತುಮಕೂರು-ರಾಯದುರ್ಗ ಮಾರ್ಗದ ವೇಗಕ್ಕೆ ಒತ್ತು ನೀಡಲಾಗುವುದು. ಮಂಗಳೂರು-ಕಾರವಾರದ ಮಾರ್ಗಕ್ಕೆ ಹುಬ್ಬಳ್ಳಿ- ಅಂಕೋಲದ ಮಾರ್ಗವನ್ನು ಸಂಪರ್ಕಿಸಬೇಕಿದೆ. ಈ ಎಲ್ಲ ಬೇಡಿಕೆಗಳಿಗೂ ಸಚಿವರು ಸಕಾರಾತಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
eesanje/url_46_23_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮುಖ್ಯಮಂತ್ರಿ ಬದಲಾವಣೆ ಗ್ಯಾರಂಟಿ : ಆರ್.ಅಶೋಕ್
2
+ : .
3
+ ಬೆಂಗಳೂರು,ಸೆ.9-ರಾಜ್ಯದಲ್ಲಿ ಮುಖ್ಯ ಮಂತ್ರಿ ಸ್ಥಾನ ಬದಲಾವಣೆಯಾಗುವುದು 100ಕ್ಕೆ ನೂರರಷ್ಟು ಬದಲಾವುದು ಖಚಿತ. ಹೀಗಾಗಿಯೇ ಅನೇಕ ಸಚಿವರು ಒಳಗೊಳಗೆ ಕುರ್ಚಿ ಮೇಲೆ ಟವಲ್ ಹಾಕಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದು ನಾವು ಹೇಳುವುದಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಹೇಳುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ನಿಶ್ಚಿತ ಎಂದು ಪುನರುಚ್ಚರಿಸಿದರು.
5
+ ಮುಖ್ಯಮಂತ್ರಿ ಕುರ್ಚಿ ಮೇಲೆ ಸಾಲು ಸಾಲು ನಾಯಕರು ಟವಲ್ ಹಾಕಿರುವುದನ್ನು ನೋಡುತ್ತಿದ್ದೇವೆ. ಎಂ.ಬಿ.ಪಾಟೀಲ್, ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಪರಮೇಶ್ವರ್ ಪ್ರಯತ್ನ ಮಾಡುತ್ತಿರುವ ವಿಚಾರ ಗೊತ್ತಿದೆ ಎಂದು ವ್ಯಂಗ್ಯವಾಡಿದರು.ಎಂ.ಬಿ.ಪಾಟೀಲ್, ನಾನು ಸೀನಿಯರ್ ಎಂದು ಹೇಳುತ್ತಾರೆ. ಜೊತೆಗೆ ಲಿಂಗಾಯತ ಪ್ರಭಾವಿ ನಾಯಕ ಎಂದು ಹೇಳಿಕೊಂಡಿದ್ದಾರೆ.
6
+ ಆರ್.ವಿ.ದೇಶಪಾಂಡೆ, ನಾನು ಅವಕಾಶ ಕೊಟ್ಟರೇ ಸಿಎಂ ಆಗುತ್ತೇನೆ ಎಂದರೆ, ಇತ್ತ ಜಾರಕಿಹೊಳಿ ಅಂತೂ ನೇರವಾಗಿ ಅಭಿಯಾನವನ್ನೇ ಪ್ರಾರಂಭಿಸಿದ್ದಾರೆ. ಶಾಸಕರು ನನ್ನ ಜೊತೆಗೆ ಎಷ್ಟು ಮಂದಿ ಇದ್ದಾರೆ? ಎಂಬುದನ್ನು ಪ್ರದರ್ಶನ ಮಾಡುತ್ತಿದ್ದಾರೆ. ದೆಹಲಿ ಮಟ್ಟದಲ್ಲೂ ಪ್ರಯತ್ನ ಮುಂದುವರೆಸಿದ್ದಾರೆ.
7
+ ಇತ್ತ ಡಾ.ಜಿ.ಪರಮೇಶ್ವರ್ ಅಂತೂ ಹೈಕಮಾಂಡ್ ನಾಯಕರ ಅಭ್ಯರ್ಥಿಯಾಗಿದ್ದಾರೆ. ಈ ಹಿಂದೆ ನಾನು ಮುಖ್ಯಮಂತ್ರಿ ಆಗಬೇಕಾಗಿದ್ದನ್ನು ತಪ್ಪಿಸಿದ್ದಾರೆ. ನಾನು ಉಪ-ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದವನು. ನನಗೊಂದು ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ.ಡಿ.ಕೆ.ಶಿವಕುಮಾರ್ ಅಂತೂ ಯಾವೆಲ್ಲಾ ಮಾರ್ಗಗಳು ಇದೆಯೋ, ಅದನ್ನೆಲ್ಲಾ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದರು.
8
+ ರಾಜ್ಯದಲ್ಲಿ ಹಾಗಾದರೆ ಮುಖ್ಯಮಂತ್ರಿಗಳ ಬದಲಾವಣೆ ಯಾವಾಗ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಶೋಕ್, ನಾವು ದಿನಾಂಕ ನಿಗದಿ ಮಾಡುವುದಲ್ಲ. ಈಗಾಗಲೇ ಕಾಂಗ್ರೆಸ್ನಲ್ಲೇ ಮುಖ್ಯಮಂತ್ರಿಗಳ ಬದಲಾವಣೆಗೆ ದಿನಾಂಕ ನಿಗದಿಯಾಗಿದೆ. ಅವರ ಪಕ್ಷದಲ್ಲೇ ಇದರ ಬಗ್ಗೆ ಚರ್ಚೆಗಳು ಜೋರಾಗಿದೆ ಎಂದು ವ್ಯಂಗ್ಯವಾಡಿದರು.
9
+ ಯಾರು, ಯಾವಾಗ ಮುಖ್ಯಮಂತ್ರಿ ಆಗಬೇಕು? ಎಂಬುದರ ಬಗ್ಗೆ ವಿಸ್ತತವಾದ ಚರ್ಚೆ ಆಗಿದೆ. ನಾವು ದಿನಾಂಕ ತಿಳಿಸಿದರೆ ಅದನ್ನು ಅವರು ಪ್ರಶ್ನೆ ಮಾಡುತ್ತಾರೆ. ನಾವು ದಿನಾಂಕ ಹೇಳುವುದಿಲ್ಲ. ಅವರಲ್ಲಿ ಈಗ ದಿನಾಂಕ ನಿಗದಿಯಾಗಿದೆ ಎಂದು ಅಶೋಕ್ ಕುಹಕವಾಡಿದರು.ಡಿ.ಕೆ.ಶಿವಕುಮಾರ್ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿಯಾಗಿದ್ದಾರೆ. ಪ್ರಧಾನಿಗಳ ಭೇಟಿ ಯಾರಿಗೂ ಅಷ್ಟು ಸುಲಭವಾಗಿ ಸಿಗುವ���ದಿಲ್ಲ.
10
+ ಅಂತಹುದರಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಕ್ಕಿದ್ದು ಹೇಗೆ? ಎಂಬ ಪ್ರಶ್ನೆ ಸಹಜವಾಗಿಯೇ ಉದ್ಭವಿಸುತ್ತದೆ ಎಂದರು. ಕಾಂಗ್ರೆಸ್ನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿಯಾಗಿದ್ದು ಅವರದೇ ಪಕ್ಷದ ಹೈಕಮಾಂಡ್ ನಾಯಕರನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಹೇಳಿದರು.
eesanje/url_46_23_5.txt ADDED
@@ -0,0 +1,7 @@
 
 
 
 
 
 
 
 
1
+ ನಟ ದರ್ಶನ್‌‌ಗೆ ರಾಜಾತಿಥ್ಯ ಪ್ರಕರಣದಲ್ಲಿ ಖೈದಿಗಳ ವಿಚಾರಣೆ
2
+
3
+ ಬೆಂಗಳೂರು,ಸೆ.9-ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಹಾಗೂ ಸಹಚರರಿಗೆ ವಿಶೇಷ ಆತಿಥ್ಯ ನೀಡಿರುವ ಬಗ್ಗೆ ತನಿಖೆ ಕೈಗೊಂಡಿರುವ ಆಗ್ನೇಯ ವಿಭಾಗದ ಪೊಲೀಸರು ಕೆಲವು ಖೈದಿಗಳು ಹಾಗೂ ವಿಚಾರಣಾಧೀನ ಖೈದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.
4
+ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಬಗ್ಗೆ ಫೋಟೋಗಳು ವೈರಲ್ಲಾಗುತ್ತಿದ್ದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್ ದಾಖಲಾಗಿವೆ. ಈ ಹಿನ್ನಲೆಯಲ್ಲಿ ಇಂದು ತನಿಖಾಧಿಕಾರಿಗಳು ಜೈಲಿಗೆ ಭೇಟಿ ನೀಡಿ ಅವರುಗಳಿಂದ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
5
+ ಪರಪ್ಪನ ಅಗ್ರಹಾರದಲ್ಲಿ ದರ್ಶನ್ನನ್ನು ಯಾರ್ಯಾರು , ಯಾವ ವೇಳೆ ಭೇಟಿಯಾಗುತ್ತಿದ್ದರು? ಆತನಿಗೆ ಏನೇನು ತಂದು ಕೊಡಲಾಗುತ್ತಿತ್ತು? ಜೈಲು ಆವರಣದಲ್ಲಿ ಟೇಬಲ್, ಚೇರು ವ್ಯವಸ್ಥೆ ಮಾಡಿದವರ್ಯಾರು? ಈ ರೀತಿ ಎಷ್ಟು ದಿನಗಳಿಂದ ಆತಿಥ್ಯ ನಡೆಯುತ್ತಿತ್ತು ಇಲ್ಲವೇ ಅಂದು ಮಾತ್ರವೇ ನೀಡಲಾಗುತ್ತೇ ಎಂಬಿತ್ಯಾದಿ ವಿವರಗಳನ್ನು ಸಹ ಖೈದಿ ಹಾಗೂ ವಿಚಾರಣಾಧೀನ ಖೈದಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
6
+ ಸಿಬ್ಬಂದಿಯೇ ಆತಿಥ್ಯ ನೀಡಿದ್ದಾರೆ ಎಂಬುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಜೈಲು ಅಧಿಕಾರಿಗಳ ಸೂಚನೆ ಮೇರೆಗೆ ನೀಡಲಾಗಿತ್ತೇ ಅಥವಾ ಖುದ್ದು ಸಿಬ್ಬಂದಿಯೇ ನೀಡಿದ್ದಾರೆಯೇ ಎಂಬಿತ್ಯಾದಿ ಮಾಹಿತಿಗಳನ್ನು ಹಲವು ಆಯಾಮಗಳಲ್ಲಿ ತನಿಖಾಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.
7
+ ಜೈಲಿನ ಬ್ಯಾರಕ್ ಎದುರು ದರ್ಶನ್ ಮತ್ತು ಸಹಚರರು ಹರಟೆ ಹೊಡೆಯುತ್ತಿದ್ದ ಫೋಟೋ ಬಹಿರಂಗಗೊಳ್ಳುತ್ತಿದ್ದಂತೆ ಜೈಲಿನ 9 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ಅಮಾನತುಗೊಂಡಿದ್ದು, ಅವರನ್ನು ಸಹ ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗುವುದು ಎಂದು ಗೊತ್ತಾಗಿದೆ.
eesanje/url_46_23_6.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಗೌಪ್ಯ ವಿಚಾರಣೆಗೆ ಹೈಕೋರ್ಟ್ ಇಂಗಿತ
2
+
3
+ ಬೆಂಗಳೂರು,ಸೆ.9-ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಪ್ರಕರಣಗಳನ್ನು ಇದೇ 12 ರಂದು ಗೌಪ್ಯ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಸ್ಪಷ್ಟಪಡಿಸಿದೆ.ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಸಿಐಡಿ ಪೊಲೀಸರು ತನಿಖೆ ನಡೆಸುವ ಕುರಿತಂತೆ ಇಂದು ಹೈಕೋರ್ಟ್ನ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಎದುರು ವಿಚಾರಣೆ ನಡೆಯಿತು.
4
+ ಆರೋಪಿ ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದರೆ, ರಾಜ್ಯಸರ್ಕಾರದ ಸಿಐಡಿ ಪರವಾಗಿ ಪ್ರೊ.ರವಿವರ್ಮ ಕುಮಾರ್ ತಮ ವಾದ ಮಂಡಿಸಿದರು.ಪ್ರಕರಣದ ವಿಚಾರಣೆ ಮುಗಿದಿದ್ದು, ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ ಎಂದು ಪ್ರೊ.ರವಿವರ್ಮ ಕುಮಾರ್ ನ್ಯಾಯಾಲಯಕ್ಕೆ ತಿಳಿಸಿದರು.
5
+ ದೋಷಾರೋಪಣ ಪಟ್ಟಿಯನ್ನು ತಮಗೆ ಕೊಟ್ಟರೆ ವಾದ ಮಂಡಿಸಲು ಅನುಕೂಲವಾಗುತ್ತದೆ ಎಂದು ಪ್ರಭುಲಿಂಗ ನಾವಡಗಿ ಹೇಳಿದಾಗ, ಈ ಪ್ರಕರಣವನ್ನು ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದು ಸೂಕ್ತವಲ್ಲ, ಇನ್ಕ್ಯಾಮೆರಾ (ಗೌಪ್ಯ ವಿಚಾರಣೆ) ನಡೆಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
6
+ ಆರೋಪಿ ಪರವಾಗಿ ವಾದಿಸಲು ದೋಷಾರೋಪಣ ಪಟ್ಟಿ ಹಾಗೂ ಅಗತ್ಯ ಮಾಹಿತಿ ಒದಗಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.ಈ ಸಂದರ್ಭದಲ್ಲಿ ಪ್ರಭುಲಿಂಗ ನಾವಡಗಿ ಅವರು, ಪ್ರಥಮ ಮಾಹಿತಿ ದಾಖಲಾದಾಗ ಐಪಿಸಿ 376 ಪ್ರಕಾರ ಅತ್ಯಾಚಾರದ ಆರೋಪ ಇರಲಿಲ್ಲ. ಆದರೆ ಆನಂತರ ಈ ಕಲಂನಡಿ ವಿಚಾರಣೆ ನಡೆದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
7
+ ಪ್ರಕರಣದ ಸವಿಸ್ತಾರವಾದ ವಾದ ಮುಕ್ತ ನ್ಯಾಯಾಲಯದಲ್ಲಿ ಬೇಡ ಎಂದು ಪುನರುಚ್ಚರಿಸಿದ ನ್ಯಾಯಮೂರ್ತಿಗಳು, ತನಿಖೆಯ ಹಂತದಲ್ಲಿ ಮೇಲ್ನೋಟಕ್ಕೆ ಆರೋಪ ಕಂಡುಬಂದ ಹಿನ್ನೆಲೆಯಲ್ಲಿ 376 ಕಲಂ ಅನ್ನು ಉಲ್ಲೇಖಿಸಲಾಗಿದೆ. ಇದರಲ್ಲಿ ತಪ್ಪೇನೂ ಇಲ್ಲ. ನಿಯಮಾವಳಿಗಳಲ್ಲೂ ಇದಕ್ಕೆ ಅವಕಾಶವಿದೆ ಅಲ್ಲವೇ ಎಂದು ಪ್ರಶ್ನಿಸಿದರು.
8
+ ತನಿಖೆಯ ಬಳಿಕ ಸಲ್ಲಿಸಲಾಗಿರುವ ದೋಷಾರೋಪಣ ಪಟ್ಟಿ ನಾಲ್ಕು ಸಂಪುಟಗಳಲ್ಲಿದ್ದು, ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲಾತಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಂರಕ್ಷಿಸಲಾಗುವುದು, ಮುಂದಿನ ವಿಚಾರಣೆ ವೇಳೆ ಇದನ್ನು ಪರಿಶೀಲಿಸುವುದು ಸೂಕ್ತ ಎಂದರಲ್ಲದೆ, ಪ್ರತಿವಾದಿ ವಕೀಲರಿಗೆ ಅಗತ್ಯ ಮಾಹಿತಿ ನೀಡುವುದಾಗಿ ನ್ಯಾಯಾಧೀಶರು ಸ್ಪಷ್ಟಪಡಿಸಿದರು.
9
+ ಮುಂದಿನ ವಿಚಾರಣೆಯನ್ನು ಸೆ.12 ಕ್ಕೆ ನಿಗದಿಪಡಿಸಲಾಗುವುದು. ಒಂದು ವೇಳೆ ಅನನುಕೂಲತೆಗಳಿದ್ದರೆ 19ಕ್ಕೆ ನಿಗದಿಪಡಿಸಲಾಗುವುದು ಎಂದು ಹೇಳಿದರು. ಅಂತಿಮವಾಗಿ 12 ರಂದೇ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
eesanje/url_46_23_7.txt ADDED
@@ -0,0 +1,8 @@
 
 
 
 
 
 
 
 
 
1
+ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರಣೆಯತ್ತ ಎಲ್ಲರ ಚಿತ್ತ
2
+
3
+ ಬೆಂಗಳೂರು,ಸೆ.9-ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯು ಹೈಕೋರ್ಟ್ನಲ್ಲಿ ನಡೆಯಲಿದೆ.
4
+ ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆಯಲಿದ್ದು, ರಾಜ್ಯಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಾಡುವ ಸಾಧ್ಯತೆ ಇದೆ.
5
+ ಸಿದ್ದರಾಮಯ್ಯ ಅವರ ಪರವಾಗಿ ವಕೀಲರಾದ ಶತಾಭೀಷ್ ಶಿವಣ್ಣ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ರಾಜ್ಯಪಾಲರು ಅಭಿಯೋಜನೆಗೆ ನೀಡಿರುವ ಪೂರ್ವಾನುಮತಿಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ಕುರಿತಂತೆ ಈವರೆಗೂ ನಾಲ್ಕು ವಿಚಾರಣೆಗಳು ನಡೆದಿವೆ.
6
+ ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಮತ್ತು ರವಿವರ್ಮಕುಮಾರ್ ಅವರು ವಾದ ಮಂಡಿಸಲಿದ್ದಾರೆ.ರಾಜ್ಯಪಾಲರ ಪರವಾಗಿ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ಮೆಹ್ತಾ ಅವರು ವಾದ ಮಂಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ, ಜೆಡಿಎಸ್ನ ಪ್ರದೀಪ್ಕುಮಾರ್ ಎಸ್.ಬಿ. ಅವರು ಅಭಿಯೋಜನೆಗೆ ಪೂರ್ವಾನುಮತಿ ಕೇಳಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.
7
+ ಆ.16 ರಂದು ಆದೇಶ ಹೊರಡಿಸಿ ಪೂರ್ವಾನುಮತಿ ನೀಡಿದ್ದರು. ಇದು ನಿಯಮಬಾಹಿರವಾಗಿದ್ದು, ರಾಜ್ಯಪಾಲರು ಕೇಂದ್ರಸರ್ಕಾರದ ಪ್ರಮಾಣಿತ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ ಹಾಗೂ ಸ್ವವಿವೇಚನೆ ಬದಲಾಗಿ ಬಾಹ್ಯ ಪ್ರಭಾವಕ್ಕೆ ಒಳಗಾಗಿ ಪೂರ್ವಾನುಮತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಪರವಾಗಿ ಅವರು ವಾದಿಸಿದ್ದರು.
8
+ ಇದು ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದ್ದು, ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದರೆ ಹಾಗೂ ಸಿದ್ದರಾಮಯ್ಯ ಅವರಿಗೆ ತೊಂದರೆಯಾಗಲಿದ್ದು, ಈಗಾಗಲೇ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗೆ ಸಾಕಷ್ಟು ಇಂಬು ನೀಡಲಿದೆ.