CoolCoder44 commited on
Commit
2bf1272
·
verified ·
1 Parent(s): 5d84735

59cd25d4098bd20fd0a9441e24cf0b7be5044e1f1aabd47144d5c3ca1fae028c

Browse files
Files changed (50) hide show
  1. eesanje/url_46_311_1.txt +9 -0
  2. eesanje/url_46_311_10.txt +9 -0
  3. eesanje/url_46_311_11.txt +10 -0
  4. eesanje/url_46_311_12.txt +5 -0
  5. eesanje/url_46_311_2.txt +7 -0
  6. eesanje/url_46_311_3.txt +13 -0
  7. eesanje/url_46_311_4.txt +8 -0
  8. eesanje/url_46_311_5.txt +8 -0
  9. eesanje/url_46_311_6.txt +13 -0
  10. eesanje/url_46_311_7.txt +6 -0
  11. eesanje/url_46_311_8.txt +16 -0
  12. eesanje/url_46_311_9.txt +9 -0
  13. eesanje/url_46_312_1.txt +13 -0
  14. eesanje/url_46_312_10.txt +11 -0
  15. eesanje/url_46_312_11.txt +9 -0
  16. eesanje/url_46_312_12.txt +6 -0
  17. eesanje/url_46_312_2.txt +4 -0
  18. eesanje/url_46_312_3.txt +7 -0
  19. eesanje/url_46_312_4.txt +13 -0
  20. eesanje/url_46_312_5.txt +7 -0
  21. eesanje/url_46_312_6.txt +10 -0
  22. eesanje/url_46_312_7.txt +5 -0
  23. eesanje/url_46_312_8.txt +12 -0
  24. eesanje/url_46_312_9.txt +11 -0
  25. eesanje/url_46_313_1.txt +11 -0
  26. eesanje/url_46_313_10.txt +7 -0
  27. eesanje/url_46_313_11.txt +8 -0
  28. eesanje/url_46_313_12.txt +13 -0
  29. eesanje/url_46_313_2.txt +10 -0
  30. eesanje/url_46_313_3.txt +9 -0
  31. eesanje/url_46_313_4.txt +6 -0
  32. eesanje/url_46_313_5.txt +4 -0
  33. eesanje/url_46_313_6.txt +8 -0
  34. eesanje/url_46_313_7.txt +7 -0
  35. eesanje/url_46_313_8.txt +10 -0
  36. eesanje/url_46_313_9.txt +7 -0
  37. eesanje/url_46_314_1.txt +5 -0
  38. eesanje/url_46_314_10.txt +5 -0
  39. eesanje/url_46_314_11.txt +17 -0
  40. eesanje/url_46_314_12.txt +6 -0
  41. eesanje/url_46_314_2.txt +5 -0
  42. eesanje/url_46_314_3.txt +10 -0
  43. eesanje/url_46_314_4.txt +11 -0
  44. eesanje/url_46_314_5.txt +9 -0
  45. eesanje/url_46_314_6.txt +12 -0
  46. eesanje/url_46_314_7.txt +10 -0
  47. eesanje/url_46_314_8.txt +4 -0
  48. eesanje/url_46_314_9.txt +13 -0
  49. eesanje/url_46_315_1.txt +10 -0
  50. eesanje/url_46_315_10.txt +13 -0
eesanje/url_46_311_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಕುಟುಂಬದ ಒತ್ತಡಕ್ಕೆ ಮಣಿಯದೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿ: ಯತ್ನಾಳ್
2
+ ಬೆಂಗಳೂರು,ನ.17- ಯಾವುದೋ ಒಂದು ಕುಟುಂಬದ ಒತ್ತಡಕ್ಕೆ ಮಣಿಯದೆ ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ವಿಪಕ್ಷ ನಾಯಕನ ಆಯ್ಕೆ ನಡೆಯಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಬ್ಲಾಕ್‍ಮೇಲ್ ಮಾಡಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳುತ್ತಾರೆ. ಅಂಥವರ ಬಗ್ಗೆ ಹೈಕಮಾಂಡ್ ಎಚ್ಚರಿಕೆ ಇಡಬೇಕು. ಬಿಜೆಪಿ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಕಾರ್ಯಕರ್ತರೇ ಈ ಪಕ್ಷದ ಆಸ್ತಿ. ಹೀಗಾಗಿ ಎಚ್ಚರಿಕೆಯಿಂದ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
4
+ ಉತ್ತರಕರ್ನಾಟಕ ಭಾಗಕ್ಕೆ ಪ್ರತಿ ಹಂತದಲ್ಲೂ ಅನ್ಯಾಯವಾಗಿದೆ. ಹೀಗಾಗಿ ನಮ್ಮ ಭಾಗಕ್ಕೆ ಕೊಟ್ಟರೆ ಪಕ್ಷದ ಬಲವರ್ಧನೆಗೆ ಸಹಾಯವಾಗಲಿದೆ. ಎಲ್ಲ ಭಾಗಕ್ಕೂ ಅವಕಾಶ ಕಲ್ಪಿಸಿರುವಾಗ ನಮ್ಮ ಭಾಗವನ್ನು ಕಡೆಗಣಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ನಾನು ಏನೇ ಮಾತನಾಡಿದರೂ ಅದು ವಿರೋಧವಾಗಬಹುದು. ಏನು ಹೇಳಬೇಕೋ ಅದನ್ನು ವೀಕ್ಷಕರಿಗೆ ಹೇಳಿದ್ದೇನೆ.
5
+ ಸ್ಥಳೀಯ ವಿಷಯಗಳು ದೆಹಲಿ ನಾಯಕರಿಗೆ ಗೊತ್ತಿರುವುದಿಲ್ಲ. ಇದೆಲ್ಲವನ್ನೂ ಗಮನಕ್ಕೆ ತಂದಿದ್ದೇನೆ. ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ನಮ್ಮ ಭಾಗಕ್ಕೆ ಅನ್ಯಾಯ ಮಾಡಿದರೆ ಅಲ್ಲಿನ ಜನ ಸುಮ್ಮನಿರುವುದಿಲ್ಲ. ಪಕ್ಷ ಬಲವರ್ಧನೆಯಾಗಬೇಕಾದರೆ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗಲೇಬೇಕು. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ನೋಡೋಣ ಎಂದು ಸೂಚ್ಯವಾಗಿ ಹೇಳಿದರು.
6
+ ನನ್ನನ್ನು ನಿನ್ನೆ ಒಬ್ಬ ಏಜೆಂಟ್ ಖರೀದಿಸಲು ಬಂದಿದ್ದ.ನಾನು ಅಷ್ಟು ಸುಲಭವಾಗಿ ಖರೀದಿಯಾಗುವುದಿಲ್ಲ ಎಂದು ಅವನಿಗೆ ಗೊತ್ತಾಗಿ ಜಾಗ ಖಾಲಿ ಮಾಡಿದ ಎಂದು ಯತ್ನಾಳ್ ಹೇಳಿದರಾದರೂ ಆತನ ಹೆಸರನ್ನು ಬಹಿರಂಗಪಡಿಸಲಿಲ್ಲ.
7
+ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ
8
+ ಈ ಯತ್ನಾಳ್ ಯಾರಿಗೂ ಹೆದರುವವನೂ ಅಲ್ಲ, ಜಗ್ಗುವವನೂ ಅಲ್ಲ. ಇದನ್ನು ನಾನು ವೀಕ್ಷಕರ ಗಮನಕ್ಕೂ ತಂದಿದ್ದೇನೆ. ಅವರು ಕೂಡ ನೀವು ಯಾರಿಗೂ ಹೆದರುವುದಿಲ್ಲ ಎಂಬುದು ಗೊತ್ತಿದೆ ಎಂದರು. ಪಂಚಮಸಾಲಿ ಸಮುದಾಯವನ್ನು ಕಡೆಗಣಿಸಿದರೆ ಎಂತಹ ಫಲಿತಾಂಶ ಬರುತ್ತದೆ ಎಂಬುದಕ್ಕೆ ವಿಧಾನಸಭೆ ಚುನಾವಣೆಯ ಫಲಿತಾಂಶವೇಶ ಸಾಕ್ಷಿ. ಎಲ್ಲದಕ್ಕೂ ನಾವು ಇನ್ನೊಬ್ಬರ ಮನೆ ಬಾಗಿಲಿಗೆ ಸಾರ್ ಸಾರ್ ಎಂದು ಹಿಂದೆ ಹೋಗಲು ಸಾಧ್ಯವೇ. ಪ್ರತಿಯೊಂದು ದಕ್ಷಿಣ ಕರ್ನಾಟಕಕ್ಕೆ ಕೊಟ್ಟರೆ ಉತ್ತರ ಕರ್ನಾಟಕದವರು ಏನು ಮಾಡಬೇಕೆಂದು ಪ್ರಶ್ನಿಸಿದರು.
9
+ ನಾನು ಹೆಚ್ಚು ಮಾತನಾಡುವುದಿಲ್ಲ. ವಿಪಕ್ಷ ನಾಯಕನ ಆಯ್ಕೆಯಾದ ಬಳಿಕ ಮಾತನಾಡುತ್ತೇನೆ ಎನ್ನುವ ಮೂಲಕ ಯತ್ನಾಳ್ ಕುತೂಹಲ ಕೆರಳಿಸಿದರು.
eesanje/url_46_311_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ
2
+ ಬೆಂಗಳೂರು,ನ.17-ಸ್ಪೀಕರ್ ಸ್ಥಾನದ ಘನತೆಯನ್ನು ಹಾಳು ಮಾಡಿರುವ ವಸತಿ ಸಚಿವ ಜಮೀರ್ ಅಹಮ್ಮದ್ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕೆಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಸ್ಥಾನ ಎನ್ನುವುದು ಅತ್ಯಂತ ಗೌರವ ಮತ್ತು ಸಾಂವಿಧಾನಿಕ ಹುದ್ದೆ. ಈ ಸ್ಥಾನವನ್ನು ಯಾರೊಬ್ಬರೂ ಜಾತಿ-ಧರ್ಮ ನೋಡಿ ಗೌರವ ಕೊಡುವುದಿಲ್ಲ. ಸ್ಥಾನಕ್ಕೆ ಗೌರವ ಕೊಡುತ್ತಾರೆ. ಜಮೀರ್ ಅಹಮ್ಮದ್ ಇದರಲ್ಲಿ ಕೂಡ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
4
+ ಸ್ಪೀಕರ್ ಕುರ್ಚಿಯಲ್ಲಿ ಯಾವ ಜಾತಿಯವರು ಇಲ್ಲವೇ ಯಾವ ಧರ್ಮದವರು ಕುಳಿತಿದ್ದಾರೆ ಎಂಬುದು ಮುಖ್ಯವಲ್ಲ. ಆ ಸ್ಥಾನಕ್ಕೆ ಯಾರೇ ಕುಳಿತರೂ ಸದಸ್ಯರು ಎದ್ದು ನಿಂತು ಗೌರವಿಸುವುದು ಶಿಷ್ಟಾಚಾರ. ಕೇವಲ ಮುಸ್ಲಿಂ ಎನ್ನುವ ಕಾರಣಕ್ಕೆ ಬಿಜೆಪಿಯವರು ಗೌರವ ಕೊಡುವುದಿಲ್ಲ. ಅವರೊಬ್ಬ ಗೌರವಾನ್ವಿತ ವಿಧಾನಸಭೆಯ ಸ್ಪೀಕರ್ ಇದನ್ನು ಸಚಿವ ಜಮೀರ್ ಅರ್ಥ ಮಾಡಿಕೊಳ್ಳಬೇಕೆಂದು ಟೀಕಿಸಿದರು.
5
+ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಏರ್​ಶೋ
6
+ ಮತ ಗಳಿಸುವ ಒಂದೇ ಕಾರಣಕ್ಕಾಗಿ ಒಂದು ಸಮುದಾಯದ ಮತಗಳ ಧೃವೀಕರಣಕ್ಕಾಗಿ ಸ್ಪೀಕರ್ ಸ್ಥಾನವನ್ನೇ ದುರ್ಬಳಕೆ ಮಾಡಿಕೊಂಡಿರುವ ಜಮೀರ್ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ.
7
+ ಮುಖ್ಯಮಂತ್ರಿಯವರು ಅವರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಸ್ಪೀಕರ್ ಸ್ಥಾನದ ಬಗ್ಗೆ ನಾಳೆ ಯಾರು ಏನೂ ಬೇಕಾದರೂ ಮಾತನಾಡುತ್ತಾರೆ. ಇದರ ಗೌರವ ಉಳಿಯಲಿದೆಯೇ ಎಂದು ಪ್ರಶ್ನೆ ಮಾಡಿದರು.ಜಮೀರ್ ಯಾವಾಗಲು ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಕೆಲಸವನ್ನೇ ಮಾಡುತ್ತಿದ್ದಾರೆ. ಅವರಿಗೆ ಸಾಂವಿಧಾನಿಕ ಹುದ್ದೆ ಯಾವುದು, ಸ್ಪೀಕರ್ ಹುದ್ದೆ ಘನತೆಯೇ ಗೊತ್ತಿಲ್ಲ. ಇಂಥವರು ಸಂಪುಟದಲ್ಲಿ ಮುಂದುವರೆಯಲೂ ಬಾರದು.
8
+ ತಕ್ಷಣವೇ ರಾಜ್ಯದ ಜನತೆಯ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
9
+ ಚುನಾವಣೆ ಸಂದರ್ಭದಲ್ಲಿ ಮತ ಕೇಳುವುದು ಪ್ರತಿಯೊಬ್ಬರ ಹಕ್ಕು. ಹಾಗಂತ ಒಂದು ಸಮುದಾಯವನ್ನು ಓಲೈಕೆ ಮಾಡಿ ಮತ್ತೊಂದು ರಾಜಕೀಯ ಪಕ್ಷಕ್ಕೆ ಇಲ್ಲವೇ ಆ ಪಕ್ಷದ ಮುಖಂಡರ ಮುಖಕ್ಕೆ ಮಸಿ ಬಳಿಯುವ ಕೆಲಸ ಮಾಡಬಾರದು. ಈ ಹಿಂದೆಯೇ ಇಂತಹ ಹೇಳಿಕೆಯನ್ನೇ ಕೊಟ್ಟಿದ್ದರು. ಈಗಲಾದರೂ ಎಚ್ಚೆತ್ತುಕೊಂಡು ಜನತೆಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
eesanje/url_46_311_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನನ್ನ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆ ಮೇಲು ಆಗಿದೆ: ಜಗದೀಶ್ ಶೆಟ್ಟರ್
2
+ ಹುಬ್ಬಳ್ಳಿ,ನ.16-ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಐದು ರಾಜ್ಯಗಳಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದು ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದರು.
3
+ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ. ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ. ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ ಬಿಟ್ಟ ವಿಚಾರ ಎಂದ ಅವರು,
4
+ ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕಿತ್ತು, ವಿಜಯೇಂದ್ರರನ್ನು ಮಾಡಿದ್ದಾರೆಆದರೆ ರಾಜ್ಯಾಧ್ಯಕ್ಷ ಸ್ಥಾನಕಾಂಕ್ಷಿಗಳು ಯಾರೂ ಪದಗ್ರಹಣಕ್ಕೆ ಹೋಗಲಿಲ್ಲ. ಒಮ್ಮೆ ನೇಮಕವಾದ ಮೇಲೆ ಎಲ್ಲರೂ ಕೂಡಿ ಕೆಲಸ ಮಾಡಬೇಕೆಂಬ ಮನೋಭಾವ ಬರಬೇಕಿತ್ತುಹೀಗಾಗಿ ಬಿಜೆಪಿಯ ಒಳ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ ಎಲ್ಲವನ್ನು ಕಾದು ನೋಡಿ, ಮುಂದೆ ನಿಮಗೆ ಗೊತ್ತಾಗುತ್ತೆ ಬಿಜೆಪಿಯಲ್ಲಿ ಹಿರಿಯರನ್ನು ದೂರವಿಡುವ ಕೆಲಸ ಬಹಳ ಹಿಂದಿನಿಂದಲೂ ನಡೆದಿದೆ. ಪಕ್ಷಕ್ಕಾಗಿ ಸಂಘಟನೆ ಮಾಡಿದವರನ್ನು, ದುಡಿದವರನ್ನು ದೂರವಿಡಲಾಗುತ್ತಿದೆ ಎಂದರು.
5
+ ಇನ್ನು ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಸದಾನಂದ ಗೌಡರನ್ನು ದೆಹಲಿಗೆ ಕರೆಯಿಸಿ ಮೂರು ದಿನ ಕಾಯಿಸಿದರು. ಐದು ನಿಮಿಷ ಮಾತನಾಡುವಷ್ಟು ಸೌಜನ್ಯವನ್ನು ತೋರಲಿಲ್ಲ. ಬಿಜೆಪಿ ಹಿರಿಯರನ್ನು ನಡೆಸಿಕೊಳ್ಳುವ ರೀತಿಗೆ ಇದೊಂದು ಉದಾಹರಣೆ. ಎಲ್‍ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ ಮೊದಲಾದವರಿಗೆ ರಾಜಕೀಯ ನಿವೃತ್ತಿ ಕೊಟ್ಟುಬಿಟ್ಟರು.
6
+ ಬಿಜೆಪಿ-ಜೆಡಿಎಸ್ ನಾಯಕರ ಹತಾಶೆಯಿಂದ ಗೊಂದಲ ಸೃಷ್ಟಿ: ಡಿಕೆಶಿ
7
+ ನನಗೆ, ಲಕ್ಷ್ಮಣ್ ಸವದಿ ಮತ್ತು ಈಶ್ವರಪ್ಪಗೆ ಕರ್ನಾಟಕದಲ್ಲಿ ಟಿಕೆಟ್ ಕೊಡಲಿಲ್ಲ. ನನಗೆ ಟಿಕೆಟ್ ತಪ್ಪಿಸಲು ಏನು ಕಾರಣ ಅಂತ ಇದುವರೆಗೂ ಹೇಳಿಲ್ಲ. ಇದರ ಪರಿಣಾಮ ಏನಾಯ್ತು ಅಂತ ಇಡೀ ಜಗತ್ತಿಗೆ ಗೊತ್ತಿದೆ. ಬಿಜೆಪಿ ವರಿಷ್ಠರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಅನ್ನೋ ಆಸೆಆದರೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದರು.
8
+ ಹೀಗಾಗಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ಹಿರಿಯರಿಗೆ ಮಣೆ ಹಾಕಲಾಗಿದೆ. ಈಗ 70-75 ಯಸ್ಸಾದಂತವರಿಗೂ ಟಿಕೆಟ್ ನೀಡಲಾಗಿದ್ದು ಅವರಿಗೆ ಯಾಕೆ ಟಿಕೆಟ್ ಕೊಟ್ಟರು. ನಿಯಮ ಎಲ್ಲರಿಗೂ ಒಂದೇ ಅನ್ವಯ ಆಗಬೇಕಲ್ಲವೇ ಅಧಿಕಾರ ಆಸೆಯಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಾರೆ.ವಯಸ್ಸಿನ ನೆಪದಲ್ಲಿ ಅಡ್ವಾಣಿ ಮುರಳಿ ಮನೋಹರ್ ಜೋಶಿಯವರನ್ನು ಮನೆಗೆ ಕಳಿಸಿದ್ರು ಈಗ ನೋಡಿದರೆ 80 ವರ್�� ಆದವರಿಗೂ ಟಿಕೆಟ್ ಕೊಟ್ಟಿದ್ದಾರೆ.
9
+ ಜಗದೀಶ್ ಶೆಟ್ಟರ್ ಎಫೆಕ್ಟ್ ಪಂಚ ರಾಜ್ಯಗಳಲ್ಲಿಯೂ ಆಗಿದೆ. ಹಾಗಾಗಿ ವಯಸ್ಸು ದಾಟಿದರೂ ಟಿಕೆಟ್ ನೀಡಲಾಗಿದೆ. ನನ್ನ ಪಕ್ಷಾಂತರದ ಎಫೆಕ್ಟ್ ತಿಳಿದುಕೊಂಡು ಮೂರ್ನಾಲ್ಕು ಮಾಜಿ ಸಿಎಂ ಗಳಿಗೆ ಟಿಕೆಟ್ ಕೊಟ್ಟಿದ್ದಾರೆ ಆದ್ದರಿಂದ ಈಗ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದರಿಂದ ಯಾವುದೇ ಆಗಲ್ಲ. ಬಿಜೆಪಿ ಕುಸಿತಿರುವ ಸಂದರ್ಭದಲ್ಲಿ ಹೆಚ್ಚಿನ ಶಕ್ತಿ ತೋರಿಸಲು ಸಾಧ್ಯವಿಲ್ಲ. ಬಿಜೆಪಿ ಕಾರ್ಯಕರ್ತರು ಧೃತಿಗೆಟ್ಟಿದ್ದಾರೆ, ಭರವಸೆ ಕಳೆದುಕೊಂಡಿದ್ದಾರೆ. ನಾಯಕನಿಲ್ಲದ ಪಕ್ಷ ಅನ್ನೋ ಕೊರಗು ಅವರನ್ನು ಕಾಡ್ತಿದೆ ಎಂದರು.
10
+ ಇನ್ನು ಆಪರೇಷನ್ ಕಮಲ ಪ್ರಕ್ರಿಯೆ ನಡೆದೆ ಇದೆ ಈ ರೀತಿ ಮಾಡಿದ್ರೆ ಕೈ ಶಾಸಕರು ತಮ್ಮ ಪಕ್ಷಕ್ಕೆ ಬರ್ತಾರೆ ಅನ್ನೋ ಭ್ರಮೆಯಲ್ಲಿದ್ದಾರೆ. ಆಪರೇಷನ್ ಕಮಲ ಪ್ರಯತ್ನ ಸಫಲವಾಗಲ್ಲ ಎಂದರು.
eesanje/url_46_311_12.txt ADDED
@@ -0,0 +1,5 @@
 
 
 
 
 
 
1
+ ಮಗಳ ಮೇಲಿನ ವ್ಯಾಮೋಹವೇ ನಾಲ್ವರ ಕೊಲೆಗೆ ಕಾರಣ..?
2
+ ಬೆಂಗಳೂರು, ನ.16- ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಹಂತಕ ಪ್ರವೀಣ್ ಅರುಣ್ ಚೌಗಲೆ , ಹಸೀನಾ ಅವರ ಎರಡನೇ ಮಗಳ ಮೇಲಿನ ವ್ಯಾಮೋಹದಿಂದ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.
3
+ ಹಸೀನಾ ಅವರ ಎರಡನೇ ಮಗಳು ಅಜ್ಞಾಝ್‍ಳನ್ನು ವಿಮಾನದಲ್ಲಿ ಕರ್ತವ್ಯದಲ್ಲಿದ್ದಾಗ ಆರೋಪಿ ಪ್ರವೀಣ್ ಆಕೆಯ ಸ್ನೇಹ ಬೆಳೆಸಿದ್ದ. ಆರೋಪಿ ಪ್ರವೀಣ್ ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದು ಇಬ್ಬರು ಮಕ್ಕಳಿರುವ ವಿಷಯ ಅಜ್ಞಾಝ್‍ಗೆ ಗೊತ್ತಾಗಿ ಪ್ರವೀಣ್‍ನಿಂದ ಅಂತರ ಕಾಯ್ದುಕೊಂಡು ಆತನನ್ನು ದೂರ ಮಾಡಿದ್ದಳು.
4
+ ಆರೋಪಿ ಪ್ರವೀಣ್ ತನ್ನಿಂದ ದೂರವಿದ್ದ ಅಜ್ಞಾಝ್‍ಳ ಪ್ರೀತಿ ಸಿಗುವುದಿಲ್ಲವೆಂದು ತಿಳಿದು ಆಕೆಯ ಜೊತೆ ಕುಟುಂಬವನ್ನೆ ಮುಗಿಸಲು ಸಂಚು ರೂಪಿಸಿ ಅ.12ರಂದು ಅವರ ಮನೆಗೆ ನುಗ್ಗಿ ಮೊದಲು ಆಕೆಯ ತಾಯಿಯನ್ನು ಕೊಲೆ ಮಾಡಿ ನಂತರ ಅಜ್ಞಾಝ್, ಈಕೆಯ ಸಹೋದರಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿ ಬೆಳಗಾವಿಯಲ್ಲಿ ತಲೆಮರೆಸಿಕೊಂಡಿದ್ದನು.
5
+ ಪ್ರವೀಣ್ ಈ ಹಿಂದೆ ಮಹರಾಷ್ಟ್ರದಲ್ಲಿ ಎರಡು ವರ್ಷ ಪೊಲೀಸ್ ಸೇವೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ.
eesanje/url_46_311_2.txt ADDED
@@ -0,0 +1,7 @@
 
 
 
 
 
 
 
 
1
+ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ
2
+ ಬೆಂಗಳೂರು, ನ.17- ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಲ್ಲದಕ್ಕೂ ಸಿದ್ಧವಾಗಿದ್ದೇನೆ. ಈ ಪೊಗರು, ಬ್ಲಾಕ್‍ಮೆಲ್‍ಗೆಲ್ಲಾ ಹೆದರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
3
+ ಕುಮಾರಸ್ವಾಮಿ ಅವರ ಆರೋಪಗಳಿಗೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಪ್ರತಿಕ್ರಿಯಿಸಿ ದರು. ಅವರು ಏನೇನು ಕೇಳುತ್ತಾರೆ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಅವರ ಮಾತುಗಳಿಗೆ, ಆಚಾರ ವಿಚಾರ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಇನ್ನೂ ಬೇಕಾದರೂ ನಾವು ಉತ್ತರ ಕೊಡುತ್ತೇವೆ. ಪಟ್ಟಿ ಕೇಳುತ್ತಿದ್ದಾರೆ ಕೊಡೋಣ ಎಂದರು.
4
+ ಬೆಂಗಳೂರಿನಲ್ಲಿ ನಾನು ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಸಂಸ್ಥೆಯದು. ದಾಖಲೆ ಮಾಡಿ ಟೆಂಡರ್ ಹಾಕಿದ್ದರು. ಅದನ್ನು ನನ್ನ ಸ್ನೇಹಿತರು ತೆಗೆದುಕೊಂಡಿದ್ದರು. ನಾನು ಅವರಿಂದ ತೆಗೆದುಕೊಂಡು, ಸಹಭಾಗಿತ್ವದಲ್ಲಿ ಮಾಲ್ ಕಟ್ಟಿದ್ದೇನೆ. ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಂದರು.
5
+ ಕೆಲಸಕ್ಕಿದ್ದ ಅಂಗಡಿಯಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು: ಇಬ್ಬರ ಬಂಧನ
6
+ ಹಿಂದೆ ಎಲ್ಲಾ ಪ್ರಯತ್ನಗಳಾಗಿವೆ. ಬಹುಶಃ ಕುಮಾರಸ್ವಾಮಿಯವರು ಮರೆತಿರಬಹುದು, ಅವರ ತಂದೆ 10-15 ವರ್ಷದ ಹಿಂದೆಯೇ ಜೈರಾಜ್ ಎಂಬ ಅಧಿಕಾರಿಗೆ ಹೇಳಿ ಖಾತೆ ನಿಲ್ಲಿಸಿದ್ದರು. ಏನು ತನಿಖೆ ಮಾಡಿಸಬೇಕೋ ಎಲ್ಲಾ ಮಾಡಿಸಿದ್ದಾರೆ. ಈಗಲೂ ಏನು ಬೇಕಾದರೂ ತನಿಖೆ ಮಾಡಿಸಿ. ನಾನೇನಾದರೂ ತಪ್ಪು ಮಾಡಿದ್ದರೆ ಗಲ್ಲಿಗೆ ಬೇಕಾದರೆ ಹಾಕಿ ಬಿಡಿ. ಅದಕ್ಕೆಲ್ಲಾ ನಾನು ರೆಡಿ ಇದ್ದೇನೆ. ಈ ಪೊಗರು, ಬ್ಲಾಕ್‍ಮೇಲ್‍ಗೆ ಹೆದರಲ್ಲ. ಸಾರ್ವಜನಿಕ ವ್ಯಕ್ತಿ ಯಾಗಿದ್ದೇನೆ. ಏನು ಬೇಕಾದರೂ ದಾಖಲೆ ಕೊಡುತ್ತೇನೆ ಎಂದರು.
7
+ ಮಾಲ್ ಕಟ್ಟಿದ್ದು ನಾನನ್ನಲ್ಲ ಜಾಯಿಂಟ್ ವೆಂಚರ್‍ನಲ್ಲಿ ಶೋಭಾ ಡೆವಲಪರ್ಸ್ ಕಟ್ಟಿದ್ದಾರೆ. ಅವರಿಗೆ ಹೇಳುತ್ತೇನೆ ಯಾವ ವಿದ್ಯುತ್ ಕದ್ದಿದ್ದಾರೆ ದಾಖಲೆ ಬಿಡುಗಡೆ ಮಾಡಿ ಎಂದು ಎಂದ ಅವರು, ಕುಮಾರಸ್ವಾಮಿ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದರು.
eesanje/url_46_311_3.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಗಣಿ ಪ್ರಕರಣದ ತನಿಖೆಗೆ ಅಂಜುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ
2
+ ಬೆಂಗಳೂರು,ನ.17- ಬಿಡದಿ ಬಳಿ ತಾವು ಖರೀದಿಸಿರುವ ಆಸ್ತಿ ಹಾಗೂ ಜಂತ್ಕಲ್ ಗಣಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ತನಿಖೆಯನ್ನು ಬೇಗ ಪೂರ್ಣಗೊಳಿಸಲಿ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನನ್ನನ್ನು ಹೆದುರಿಸಲು ಸಾಧ್ಯವಿಲ್ಲ. ಏಕಾಂಗಿಯಾಗಿ ಹೋರಾಟ ಮಾಡುವುದಾಗಿ ತಿಳಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಸಚಿವ ಸಂಪುಟ ಸಭೆ ನಡೆದ ನಂತರ ನನ್ನ ಬಗ್ಗೆಯೇ ಪ್ರತ್ಯೇಕ ಸಭೆ ನಡೆಸಿದ್ದಾರೆ. ಬಿಡದಿ ಬಳಿ ಜಮೀನು ಖರೀದಿಸಿ 38 ವರ್ಷವಾಗಿದೆ. ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ಕಾಲದಿಂದ ಇಲ್ಲಿಯವರೆಗೆ ಆಗಿರುವ ತನಿಖೆ ಬಗ್ಗೆ ಪುಸ್ತಕ ಬರೆಯಬಹುದು. ಲೋಕಾಯುಕ್ತ, ಸಿಐಡಿ ತನಿಖೆ ಎಲ್ಲವೂ ಆಗಿದೆ. ಇನ್ನೊಮ್ಮೆ ತನಿಖೆ ಮಾಡಿಸಿ ನನಗಿನ್ನೂ ಮೂರ್ನಾಲ್ಕು ಎಕರೆ ಜಮೀನು ಸಿಕ್ಕಿಲ್ಲ. ಅದನ್ನು ಹುಡುಕಿ ಕೊಡಲಿ ಎಂದು ಹೇಳಿದರು.
4
+ ಮುಖ್ಯಮಂತ್ರಿ ಉಸ್ತುವಾರಿಯಲ್ಲೇ ಜಂತ್ಕಲ್ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಅದಕ್ಕೆ ನಾನು ಹೆದರಿಕೊಳ್ಳುವುದಿಲ್ಲ. ಜಂತ್ಕಲ್ ಪ್ರಕರಣ ಮುಗಿಸಲು ಮುಖ್ಯಮಂತ್ರಿಯಾಗಿದ್ದಾಗ ಒತ್ತಡವನ್ನೂ ಹೇರಿಲ್ಲ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿ ಮಾಲೀಕರಿಂದ 20 ಲಕ್ಷ ರೂ.ವನ್ನು ಪುತ್ರನ ಖಾತೆಗೆ ಪಡೆದುಕೊಂಡಿದ್ದ ಅಧಿಕಾರಿ ಜೈಲಿಗೆ ಹೋಗಿದ್ದಾರೆ. ಅದನ್ನು ನನ್ನ ತಲೆಗೆ ಕಟ್ಟಲು ಹುನ್ನಾರ ನಡೆಸಿದ್ದರು ಎಂದರು.
5
+ ಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ
6
+ ಜಂತ್ಕಲ್ ಗಣಿಗಾರಿಕೆ ಪ್ರಕರಣವನ್ನು ಶೀಘ್ರವಾಗಿ ಪೂರ್ಣಗೊಳಿಸಲಿ ಎಂದ ಅವರು, ನಾನು ಯಾವುದೇ ಕಾರಣಕ್ಕೂ ಅಂಜುವುದಿಲ್ಲ. ಸುಳ್ಳು ದಾಖಲೆ ಸೃಷ್ಟಿ ಮಾಡಿಲ್ಲ ಎಂದು ಆರೋಪಿಸಿದರು.ಹಲವು ಪ್ರಕರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಎಸಿಬಿ ರಚಿಸಿಕೊಂಡಿದ್ದರು. ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ರೀಡೂ ವರದಿ ಏನಾಯ್ತು ಎಂದು ಪ್ರಶ್ನಿಸಿದರು.
7
+ ಕರಾಬ್ ಜಮೀನಿನಲ್ಲಿ ಮಾಲು:ವಿರೋಧ ಪಕ್ಷದ ಸ್ಥಾನದಲ್ಲಿದ್ದು ಕಾನೂನು ಬಾಹಿರ ಕೃತ್ಯಗಳನ್ನು ಹೊರಗೆ ತರುವ ಪ್ರಯತ್ನವನ್ನು ನಾನು ಮಾಡುತ್ತಿದ್ದೇನೆ. ಮಿನರ್ವ ಮಿಲ್‍ಗೆ ಸುಮಾರು 1934ರಲ್ಲಿ ಮಂಜೂರಾಗಿದ್ದ ಜಮೀನು 24 ಎಕರೆ ಕರಾಬ್ ಭೂಮಿಯಲ್ಲಿ ಲೂಲು ಮಾಲ್ ನಿರ್ಮಿಸಲಾಗಿದೆ. ಅಲ್ಲಿದ್ದ ಹೈಟೆನ್ಷನ್ ವೈರ್‍ಗಳನ್ನು ಅಂಡರ್‍ಗ್ರೌಂಡ್‍ನಲ್ಲಿ ತೆಗೆದುಕೊಂಡು ಹೋಗಲಾಗಿದೆ. ಇದಕ್ಕೆ ಕಂಪನಿಯಿಂದ ಹಣ ಕಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು.
8
+ ಅಲ್ಲದೆ ಮಾಲ್‍ನ ಕಟ್ಟಡ ನಿರ್ಮಾಣ ಮಾಡುವಾಗ ಬಳಸಿದ ವಿದ್ಯುತ್‍ಗೆ ಪೂರ್ವಾನುಮತಿ ಪಡೆದು ಹಣ ಪಾವತಿಸಿದ್ದಾರೆಯೇ ಎಂದು ಪ್ರಶ್ನಿಸಿದರು. ನನ್ನ ವಿರುದ್ಧ ನಾಲ್ಕು ಕೇಸ್‍ಗಳನ್ನು 2009ರಲ್ಲಿ ಹಾಕಲಾಗಿತ್ತು. ವಕೀಲರ ಸಲಹೆ ಮೇರೆಗೆ ಜಾಮೀನನ್ನು ಪಡೆದಿದ್ದಾಗಿ ಸ್ಪ��್ಟಪಡಿಸಿದರು.
9
+ ಕ್ಷಮೆಗೆ ಆಗ್ರಹ:ಸಭಾಧ್ಯಕ್ಷರಾದವರು ವಿಧಾನಸಭೆಯ 224 ಸದಸ್ಯರ ರಕ್ಷಣೆ ಮಾಡಬೇಕು. ಸಭಾಧ್ಯಕ್ಷರ ಹೆಸರನ್ನು ಬಳಸಿ ಸಚಿವರೊಬ್ಬರು ಬಿಜೆಪಿ ನಾಯಕರ ಬಗ್ಗೆ ಬಳಸಿರುವ ಪದಬಳಕೆಗೆ ಕ್ಷಮೆ ಯಾಚಿಸಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದರು. ಸಭಾಧ್ಯಕ್ಷರಾದವರು ಒಂದು ಧರ್ಮದ ಪ್ರತಿನಿಧಿಯಲ್ಲ. ಸಂವಿಧಾನ ಬದ್ದವಾಗಿ ಕರ್ತವ್ಯ ನಿರ್ವಹಿಸುವವರು. ಅವರ ಹೆಸರಿನಲ್ಲಿ ಹುಡುಗಾಟಿಕೆ ಮಾಡುವುದು ಸರಿಯಲ್ಲ. ಈ ರೀತಿಯಾದರೆ ಸದನದ ನಿಯಮವನ್ನು ಉಳಿಸುತ್ತಾರೆಯೇ ಎಂದು ಪ್ರಶ್ನಿಸಿದರು.
10
+ ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್
11
+ ನಂಬಬೇಕೆ?: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಬಗ್ಗೆ ಐದು ಶಾಲೆಗಳಿಗೆ ಸಿಎಸ್‍ಆರ್ ನಿಧಿ ಬಳಕೆ ವಿಚಾರಕ್ಕೆ ಮಾತನಾಡಿದ್ದಾರೆ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನು ನಾವು ನಂಬಬೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
12
+ ಇನ್ನು ಬೆಳಗ್ಗೆ ಮಾಧ್ಯಮಗಳಲ್ಲಿ ಆ ವಿಡಿಯೋ ಪ್ರಸಾರವಾದ ಕೂಡಲೇ ಅಂದರೆ 10-11 ಗಂಟೆಗೆ ಈ ಆರೋಪದ ಬಗ್ಗೆ ಸ್ಪಷ್ಟನೆ ನೀಡಬಹುದಿತ್ತು. ಆದರೆ ಮಧ್ಯಾಹ್ನ 3 ಗಂಟೆವರೆಗೆ ಏಕೆ ಕಾಯಬೇಕಿತ್ತು ಎಂದರು.ಡೂಪ್ಲಿಕೇಟ್ ಸಿಎಂ ಹೇಳಿದ ಮೇಲೆ ಸಿಎಸ್‍ಆರ್ ನಿಧಿ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದ ಅವರು, ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು.
13
+ ಮಾತನಾಡುವಾಗ ವಿವೇಕನಂದ ಯಾರೂ ಎಂದು ಪ್ರಶ್ನಿಸಿದ್ದಾರೆ. ಸಿಎಸ್‍ಆರ್ ನಿಧಿ ವಿಚಾರವಾಗಿದ್ದರೆ ಬಿಇಒ ವಿವೇಕನಂದ ಎಂಬುದು ಗೊತ್ತಾಗುತ್ತಿರಲಿಲ್ಲವೇ? ಸಿದ್ದರಾಮಯ್ಯನವರ ಹುಟ್ಟೂರಿನ ಶಾಲೆಗೆ ಈ ನಿಧಿ ಕೊಟ್ಟಿದ್ದಾರೆಯೆ? ಎಂದು ಪ್ರಶ್ನಿಸಿದ ಅವರು, ನನ್ನ ಪುತ್ರ ಹಾಗೂ ಶಾಸಕರಾಗಿದ್ದ ಪತ್ನಿ ಎಂದು ಕೂಡ ಮುಖ್ಯಮಂತ್ರಿ ಕಚೇರಿಯ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲ ಎಂದು ಸ್ಪಷ್ಟಪಡಿಸಿದರು.ಗೋಷ್ಠಿಯಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್, ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಉಪಸ್ಥಿತರಿದ್ದರು.
eesanje/url_46_311_4.txt ADDED
@@ -0,0 +1,8 @@
 
 
 
 
 
 
 
 
 
1
+ ಕಾಂಗ್ರೆಸ್‍ಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ವಿಜಯೇಂದ್ರ
2
+ ಬೆಂಗಳೂರು,ನ.17- ವಿಧಾನಸಭೆಯಲ್ಲಿ ಭಾರೀ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‍ಗೆ ಅಧಿಕಾರದ ಅಮಲು ನೆತ್ತಿಗೇರಿದೆ. ಜನತೆ ಶೀಘ್ರದಲ್ಲೇ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ವರ್ಗಾವಣೆಯ ದಂಧೆ ನಡೆಯುತ್ತಲೇ ಇದೆ ಎಂದು ನಾವು ಹೇಳಿದ್ದೆವು. ಈಗ ಅವರ ಪಕ್ಷದವರೇ ನಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಏನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದರು.
4
+ ಅಧಿಕಾರ ಶಾಶ್ವತವಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದರ್ಪ, ದುರಹಂಕಾರ, ಮ್ಮಾಕು ಬಹಳ ದಿನ ನಡೆಯುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ನಿಮಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು.
5
+ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯ ವೇಳೆ ಪತ್ತೆಯಾದ ಹಣದ ಮೂಲ ಯಾರಿಗೆ ಸೇರಿದ್ದು ಎಂಬುದನ್ನು ಕಾಂಗ್ರೆಸ್ ನಾಯಕರು ಹೇಳಲು ಸಿದ್ದರಿದ್ದೀರಾ? ಐಟಿ ದಾಳಿಯಾದಾಗ ಮುಖ್ಯಮಂತ್ರಿ ಡಿಸಿಎಂ ಸೇರಿದಂತೆ ಎಲ್ಲರೂ ಬಾಯಿಗೆ ಬಂದಂತೆ ಮಾತನಾಡಿದರು ಎಂದು ಕಿಡಿಕಾರಿದರು.
6
+ ಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ
7
+ ಕಡೆಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐಟಿ ದಾಳಿಯನ್ನು ಸ್ವಾಗತಿಸಬೇಕು. ಬದಲಿಗೆ ದಾಳಿ ನಡೆದಿದ್ದು ತಪ್ಪು ಎಂಬ ರೀತಿಯಲ್ಲಿ ಮಾತನಾಡಿದರು ಎಂದು ಕಿಡಿಕಾರಿದರು.ಸ್ಪೀಕರ್ ಸ್ಥಾನದ ಬಗ್ಗೆ ಲಘುವಾಗಿ ಸಚಿವ ಜಮೀರ್ ಅಹಮ್ಮದ್ ನೀಡಿರುವ ಹೇಳಿಕೆ ಅತ್ಯಂತ ದುರದೃಷ್ಟಕರ. ಸ್ಪೀಕರ್ ಸ್ಥಾನದ ಬಗ್ಗೆಯೇ ಗೌರವವಿಲ್ಲ ಎಂದರೆ ಹೇಗೆ ಎಂದು ವಿಜಯೇಂದ್ರ ಪ್ರಶ್ನೆ ಮಾಡಿದರು.
8
+ ಜಮೀರ್ ತಮ್ಮ ಮನದಲ್ಲಿರುವ ಇಂಗಿತವನ್ನೇ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜವಾಬ್ದಾರಿಯಿಂದ ಮಾತನಾಡಬೇಕು. ಇತ್ತೀಚೆಗೆ ಅವರಿಗೆ ವಿವಾದ ಎಳೆದುಕೊಳ್ಳುವುದು ಕಾಯಕವಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಮಧ್ಯಪ್ರವೇಶಿಸಿ ಜಮೀರ್‍ಗೆ ಬಾಯಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.
eesanje/url_46_311_5.txt ADDED
@@ -0,0 +1,8 @@
 
 
 
 
 
 
 
 
 
1
+ ಸರ್ಕಾರಕ್ಕೆ ಮುಜುಗರ ತಂದ ಜಮೀರ್ ಹೇಳಿಕೆ
2
+ ಬೆಂಗಳೂರು, ನ.17- ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದ್ದು, ಕಾಂಗ್ರೆಸ್ ಪಕ್ಷವನ್ನು ಹೊಗಳುವ ಭರದಲ್ಲಿ ಸ್ಪೀಕರ್ ಹುದ್ದೆಯ ಕುರಿತು ಅನಪೇಕ್ಷಿತ ಹೇಳಿಕೆ ತೀವ್ರ ಮುಜುಗರಕ್ಕೆ ಕಾರಣವಾಗಿದೆ.
3
+ ತೆಲಂಗಾಣದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ಸಚಿವ ಜಮೀರ್ ಅಹ್ಮದ್ ಖಾನ್, ಕಾಂಗ್ರೆಸ್ ಪಕ್ಷ 17 ಮಂದಿ ಮುಸ್ಲಿಂರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಿತ್ತು. ಒಂಬತ್ತು ಮಂದಿ ಆಯ್ಕೆಯಾಗಿದ್ದೇವೆ. ಅವರಲ್ಲಿ ನನ್ನನ್ನು ಸೇರಿದಂತೆ ಐದು ಮಂದಿಗೆ ಬೇರೆ ಬೇರೆ ರೀತಿಯ ಅಕಾರವನ್ನು ಕಾಂಗ್ರೆಸ್ ನೀಡಿದೆ.
4
+ ನನಗೆ ಸಚಿವ ಸ್ಥಾನ ನೀಡಿ, ಮೂರು ಖಾತೆಗಳ ಜವಾಬ್ದಾರಿ ವಹಿಸಲಾಗಿದೆ. ರಹಿಂಖಾನ್‍ರನ್ನು ಸಚಿವರನ್ನಾಗಿ ಮಾಡಲಾಗಿದೆ, ಕೆಪಿಸಿಸಿ ಕಾರ್ಯಧ್ಯಕ್ಷ ಸಲಿಂ ಅಹಮದ್‍ರನ್ನು ವಿಧಾನ ಪರಿಷತ್‍ನ ಮುಖ್ಯಸಚೇತಕರನ್ನಾಗಿ ಮಾಡಲಾಗಿದೆ. ನಸೀರ್ ಅಹ್ಮದ್‍ರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿ ಈವರೆಗೂ ಮುಸ್ಲಿಂ ನಾಯಕನೊಬ್ಬನನ್ನು ಸ್ಪೀಕರ್ ಮಾಡಿರಲಿಲ್ಲ. ಕಾಂಗ್ರೆಸ್ ಮೊದಲ ಬಾರಿಗೆ ಯು.ಟಿ.ಖಾದರ್‍ರನ್ನು ಸ್ಪೀಕರ್ ಮಾಡಿದೆ. ಇವತ್ತು ಬಿಜೆಪಿಯ ನಾಯಕರು ಕೂಡ ಯು.ಟಿ.ಖಾದರ್ ಅವರ ಮುಂದೆ ನಮಸ್ಕಾರ ಸಾರ್ ಎಂದು ನಿಲ್ಲಬೇಕಾಗಿದೆ. ಇದನ್ನು ಮಾಡಿರುವುದು ಕಾಂಗ್ರೆಸ್ ಎಂದು ಹೇಳಿದ್ದಾರೆ. ಈ ಹೇಳಿಕೆ ವಿರೋಧ ಪಕ್ಷಗಳನ್ನು ಕೆರಳಿಸಿದೆ.
5
+ ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್
6
+ ವಿವಾದಗಳ ನಿಸ್ಸಿಮ:ಜಮೀರ್ ಅಹ್ಮದ್ ಖಾನ್ ಪದೇ ಪದೇ ವಿವಾದಗಳನ್ನು ಸೃಷ್ಟಿಸುವುದರಲ್ಲಿ ನಿಸ್ಸಿಮರು. ಈ ಮೊದಲು ಕಾಂಗ್ರೆಸ್ ಪಕ್ಷದಲ್ಲೇ ನಾನಾ ರೀತಿಯ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ವಿಧಾನಸಭೆ ಚುನಾವಣೆಗೂ ಮೊದಲೇ ಪ್ರತಿಪಾದನೆ ಮಾಡಿದ್ದರು. ಹೈಕಮಾಂಡ್ ಎಚ್ಚರಿಕೆ ನೀಡಿದರೂ ಕ್ಯಾರೆ ಎನ್ನದೆ ಮಾತುಗಳನ್ನಾಡಿದರು. ಅದರ ಪರಿಣಾಮ ಅವರ ಆಪ್ತ ಸ್ನೇಹಿತರಾಗಿದ್ದ ಪುಲಕೇಶಿನಗರದ ಕ್ಷೇತ್ರದ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ಶಾಸಕರಾಗಿದ್ದರು, ಟಿಕೆಟ್ ತಪ್ಪುವಂತಾಯಿತು. ಆ ಬಳಿಕ ಪಕ್ಷದ ಒಳಗೆ ಮುಜುಗರವಾಗುವಂತಹ ಹೇಳಿಕೆಗಳಿಗೆ ಜಮೀರ್ ಕಡಿವಾಣ ಹಾಕಿಕೊಂಡಿದ್ದರು.
7
+ ಅಭಿವೃದ್ಧಿ ವಿಷಯದಲ್ಲಿ ಹೆಚ್ಚು ಸುದ್ದಿಯಾಗದ ಸಚಿವ ಜಮೀರ್ ವಿವಾದಿತ ಹೇಳಿಕೆ, ಹಾಸ್ಯಾಸ್ಪದ ನಡವಳಿಕೆಗಳಿಂದಲೇ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಕಾಂಗ್ರೆಸ್‍ನಲ್ಲಿ ಜಮೀರ್‍ಗಾಗಿ ಹಲವು ನಿಷ್ಠಾವಂತ ಮೂಲ ಕಾಂಗ್ರೆಸಿಗರನ್ನು ಬದಿಗೆ ಸರಿಸಲಾಗಿದೆ ಎಂಬ ಆರೋಪಗ��ಿವೆ. ಈ ಬಗ್ಗೆ ವ್ಯಾಪಕ ಆಕ್ರೋಶಗಳು ಒಳಗೊಳಗೆ ಕುದಿಯುತ್ತಿವೆ.
8
+ ಚುನಾವಣಾ ಕಾಲದಲ್ಲಿ ಗೊಂದಲಗಳಾದರೆ ಕಾಂಗ್ರೆಸ್‍ಗೆ ನಷ್ಟವಾಗುತ್ತದೆ. ಮುಸ್ಲಿಂರ ವಿರುದ್ಧ ಸದಾ ಕಲ ಕೆಂಡ ಕಾರುವ ಬಿಜೆಪಿಗೆ ಲಾಭವಾಗುತ್ತದೆ. ಇದರಿಂದ ಭವಿಷ್ಯದಲ್ಲಿ ಮುಸ್ಲಿಂ ಸಮುದಾಯ ಮತ್ತಷ್ಟು ಆತಂಕಗಳನ್ನು ಹೆದರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷದೊಳಗಿನ ಅಲ್ಪಸಂಖ್ಯಾತ ನಾಯಕರು ಜಮೀರ್ ಅವರ ಪಾರುಪತ್ಯವನ್ನು ಅವಡುಗಚ್ಚಿ ಸಹಿಸಿಕೊಂಡಿದ್ದಾರೆ. ಆದರೂ ಜಮೀರ್ ಅನಪೇಕ್ಷಿತ ಹೇಳಿಕೆಗಳ ಮೂಲಕ ಸರ್ಕಾರ ಹಾಗೂ ಪಕ್ಷವನ್ನು ಮುಜಗರಕ್ಕೀಡು ಮಾಡುವುದನ್ನು ಮುಂದುವರೆಸಿರುವುದು ನಾಯಕರ ಅಸಹನೆಗೆ ಕಾರಣವಾಗಿದೆ.
eesanje/url_46_311_6.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್
2
+ ಉಡುಪಿ, ನ.17- ನಾಲ್ವರ ಹತ್ಯೆ ಪ್ರಕರಣದಿಂದ ಸಂಕಷ್ಟಕ್ಕೀಡಾಗಿರುವ ಕುಟುಂಬದ ಸದಸ್ಯರನ್ನು ಉಡುಪಿ ಜಿಲ್ಲೆಯ ಉಸ್ತುವಾರಿ ಹಾಗೂ ಮಹಿಳಾ-ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ.
3
+ ಈ ವೇಳೆ ಕುಟುಂಬದ ಸದಸ್ಯರು ಸಚಿವರಿಗೆ ಮನವಿ ನೀಡಿ ಪ್ರಕರಣವನ್ನು ತ್ವರಿತ ನ್ಯಾಯಾಲಯದಿಂದ ವಿಚಾರಣೆ ನಡೆಸಬೇಕು, ಸರ್ಕಾರಿ ಅಭಿಯೋಜಕರನ್ನಾಗಿ ಶಿವಪ್ರಸಾದ್ ಆಳ್ವರನ್ನು ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಜನನಿಭೀಡ ಪ್ರದೇಶದಲ್ಲಿ ನಡೆದ ಹತ್ಯೆ ಪ್ರಕರಣ ಜನ ಸಾಮಾನ್ಯರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಆಘಾತಕ್ಕೆ ಒಳದ ಸ್ಥಳೀಯರು ಕುಟುಂಬದ ಸದಸ್ಯರ ಜೊತೆಗೆ ಬೆಂಬಲವಾಗಿ ನಿಂತರು. ಸಂತ್ರಸ್ಥರಿಗೆ ನೀರು, ಶರಬತ್ತು ನೀಡಿ ಸಂತೈಸಲಾಯಿತು. ಪರಸ್ಪರ ಸೌಹಾರ್ದತೆಯಿಂದ ಘಟನೆಯನ್ನು ಜನ ನಿಭಾಯಿಸಿದ್ದಾರೆ. ಹಿಂದುಗಳು ದೀಪಾವಳಿಯನ್ನು ಆಚರಿಸದೆ ಶೋಕಾಚರಣೆ ಮಾಡಿದ್ದಾರೆ ಎಂದು ಸಚಿವರಿಗೆ ಸ್ಥಳಿಯ ಮುಖಂಡರು ವಿವರಿಸಿದರು.
4
+ ಮುಖ್ಯಮಂತ್ರಿ ಕಚೇರಿಯಿಂದ ಅಧಿಕಾರಿಗಳು ಹಾಗೂ ಗೃಹಸಚಿವರು ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದಾರೆ. ಈಗ ಸರ್ಕಾರದ ಪ್ರತಿನಿಧಿಯಾಗಿ ನೀವು ಬಂದಿದ್ದೀರಿ, ಸಮಾಧಾನವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಂತೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರ ನಿಮ್ಮ ಜೊತೆಗಿದೆ ಎಂದು ಕುಟುಂಬದ ಸದಸ್ಯರಿಗೆ ಭರವಸೆ ನೀಡಿದರು.
5
+ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ ಜಿಲ್ಲೆ ಬೆಚ್ಚಿ ಬೀಳುವಂತಹ ಘಟನೆ ಆಗಿದೆ. ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಶವಾಗಿ ರಾಕ್ಷಸ ಪ್ರವೃತ್ತಿಯಿಂದ ಕೊಲೆ ಮಾಡಲಾಗಿದೆ. ಸರ್ಕಾರ ಕುಟುಂಬದವರ ಜೊತೆಯಲ್ಲಿದೆ. ಪೊಲೀಸರು 60 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕುಟುಂಬದ ಸದಸ್ಯರಿಗೆ ಆದಷ್ಟು ಬೇಗ ನ್ಯಾಯ ದೊರಕಿಸಲು ಸಾಧ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.
6
+ ಆರೋಪಿಯನ್ನು ನೋಡಿದರೆ ಸೈಕೋ ಥರಾ ಇದ್ದಾನೆ. ಮೊದಲನೇ ಮದುವೆಯಾಗಿದ್ದ ಆತನಿಗೆ ಎರಡು ಮಕ್ಕಳಿವೆ. ಸೈಕೋ ಕ್ಲಿಲರ್ ಥರಾ ಬಂದು 20 ನಿಮಿಷದಲ್ಲಿ ಕೊಲೆ ಮಾಡಿದ್ದಾನೆ ಎಂದರೆ ಆತನ ಮಾನಸಿಕ ಸ್ಥಿತಿ ಎಷ್ಟು ಕ್ರೋರವಾಗಿತ್ತು ಎಂದು ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
7
+ ಆರೋಪಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿನ ನೀರಾವರಿ ಇಲಾಖೆಯ ಮಾಜಿ ಅಧಿಕಾರಿ ಮನೆಯಲ್ಲಿ ಅಡಗಿಕೊಂಡಿದ್ದ. ಕೃತ್ಯದ ಬಗ್ಗೆ ಆಶ್ರಯ ನೀಡಿದ ಮನೆಯವರಿಗೆ ತಿಳಿದಿರಲಿಲ್ಲ. ಆತನ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇರಲಿಲ್ಲ ಎಂದು ಹೇಳಿದರು. ಪ್ರಕರಣವನ್ನು ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು. ಸರ್ಕಾರಿ ಅಭಿಯೋಜಕರ ನೇಮಕ ಕುರಿತಂತೆ ಕುಟುಂಬದ ಸದಸ್ಯರು ಮನ��ಿ ಮಾಡಿದ್ದಾರೆ. ಸರ್ಕಾರ ಕಾನೂನಾತ್ಮಕ ನೆಲೆಯಲ್ಲಿ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.
8
+ ಮುಸ್ಲಿಂ ಖಾದರ್‌ಗೆ ಬಿಜೆಪಿಯ ದೊಡ್ಡ ನಾಯಕರು ನಮಸ್ಕರಿಸುತ್ತಾರೆ : ಸಚಿವ ಜಮೀರ್
9
+ ಉಡುಪಿ ಜಿಲ್ಲೆಯ ಜನ ಶಾಂತಿ ಪ್ರಿಯರು, ಜನವಸತಿ ಪ್ರದೇಶದಲ್ಲಿ ಘಟನೆ ನಡೆದಿರುವುದು ಆಘಾತ ಮೂಡಿಸಿದೆ. ಮುಂದಿನ ದಿನಗಳಲ್ಲಿ ಇಂತಹದ್ದಕ್ಕೆ ಅವಕಾಶವಾಗದಂತೆ ಎಚ್ಚರಿಕೆ ವಹಿಸಲಾಗುವುದು. ಭದ್ರತಾ ದೃಷ್ಟಿಯಿಂದ ಸಿಸಿಟಿವಿ ಅಳವಡಿಕೆ ಸೇರಿದಂತೆ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ, ಎಸ್‍ಪಿ ಅವರಿಗೆ ಸೂಚಿಸುತ್ತೇನೆ. ಘಟನೆಯಾದ ತಕ್ಷಣ ನಾನು ಸ್ಥಳಕ್ಕೆ ಬರಲಿಲ್ಲ ಎಂಬುದಕ್ಕೆ ಹೆಚ್ಚಿನ ಮಹತ್ವ ನೀಡಬಾರದು. ನಾನು ಅಂದು ಬೆಳಗಾವಿಯಲ್ಲಿ ಇದ್ದೆ, ಬೆಳಗಾವಿಯಿಂದ ಉಡುಪಿಗೆ ರೈಲು ಅಥವಾ ವಿಮಾನದ ಸೌಲಭ್ಯ ಇಲ್ಲ. ನಾನು ಎಲ್ಲೇ ಇದ್ದರೂ ಜಿಲ್ಲಾಡಳಿತ ಹಾಗೂ ಕುಟುಂಬದ ಸದಸ್ಯರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು ಜವಾಬ್ದಾರಿ ನಿಭಾಯಿಸಿದ್ದೇನೆ. ನಿನ್ನೆ ಸಚಿವ ಸಂಪುಟ ಸಭೆ ಮುಗಿಸಿದ ಬಳಿಕ ಇಂದು ಇಲ್ಲಿಗೆ ಆಗಮಿಸಿದ್ದೇನೆ ಎಂದರು.
10
+ ಬಳಿಕ ಸಚಿವರು ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಗ್ನಿ ಆಕಸ್ಮಿಕ ನಡೆದಲ್ಲೇ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರರೊಂದಿಗೆ ಚರ್ಚೆ ನಡೆಸಿದರು.
11
+ 9 ಬೋಟ್‍ಗಳು, ಎರಡು ದೋಣಿಗಳು ಸಂಪೂರ್ಣ ಸುಟ್ಟಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು. ಅಗ್ನಿ ದುರಂತದಿಂದ ಸುಮಾರು 13 ರಿಂದ 15 ಕೋಟಿ ರೂ ನಷ್ಟ ಅಂದಾಜಿಸಲಾಗಿದೆ. ಇನ್ನು 15 ದಿನಗಳಲ್ಲಿ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
12
+ ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ
13
+ ಮುಂದೆ ಇಂತಹ ದುರ್ಘಟನೆ ಮರುಕಳಿಸಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಬಂದರಿನಲ್ಲಿ ಅಗ್ನಿ ಶಾಮಕ ದಳ ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಜಿಲ್ಲಾಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಮುಖಂಡರಾದ ಗೋಪಾಲ ಪೂಜಾರಿ ಉಪಸ್ಥಿತರಿದ್ದರು.
eesanje/url_46_311_7.txt ADDED
@@ -0,0 +1,6 @@
 
 
 
 
 
 
 
1
+ ಪ್ರೀತಿಸುತ್ತಿದ್ದ ಯುವತಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ
2
+ ಹಾಸನ,ನ.17- ಪ್ರೀತಿಸುತ್ತಿದ್ದ ಯುವತಿಯನ್ನೇ ಕತ್ತು ಸೀಳಿ ಕ್ರೂರಿ ಪ್ರಿಯಕರ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರ ಹೊರವಲಯದ ಕುಂತಿಬೆಟ್ಟದಲ್ಲಿ ನಡೆದಿದೆ. ಸುಚಿತ್ರಾ(21)ಕೊಲೆಯಾದ ದುರ್ದೈವಿಯಾಗಿದ್ದು, ಶಂಕರನಹಳ್ಳಿ ಗ್ರಾಮ ನಿವಾಸಿ ಆರೋಪಿ ತೇಜಸ್‍ನನ್ನು ಪೊಲೀಸರು ಬಂಧಿಸಿದ್ದಾರೆ.
3
+ ಮೊಸಳೆ ಹೊಸಳ್ಳಿ ಬಳಿಯ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳಾಗಿದ್ದಾಗ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಪದವಿ ಪೂರ್ಣಗೊಳಿಸಿದ ನಂತರ ಉದ್ಯೋಗ ಹುಡುಕುತ್ತಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಜಗಳವಾಗಿ ಸುಮಾರು 1 ತಿಂಗಳು ಪರಸ್ಪರ ಮಾತುಕತೆ ಬಿಟ್ಟಿದ್ದರು ,ಪ್ರೀತಿ ಬ್ರೇಕ್‍ಅಪ್ ಆಗಿತ್ತು ಮೊನ್ನೆ ಸುಚಿತ್ರಾಗೆ ಕರೆ ಮಾಡಿ ಮಾತನಾಡಬೇಕು ಬಾ ಎಂದು ಆರೋಪಿ ತೇಜಸ್ ಕರೆದಿದ್ದಾನೆ.
4
+ ಇಸ್ರೇಲ್-ಹಮಾಸ್ ಯುದ್ದದ ಸಾವು-ನೋವುಗಳಿಗೆ ಮೋದಿ ಖಂಡನೆ
5
+ ಗುರುವಾರ ಮುಂಜಾನೆ ಭೇಟಿಯಾದ ಇಬ್ಬರು ಮಾತುಕತೆ ನಡೆಸಿದ್ದಾರೆ, ನಂತರ ತೇಜಸ್ ಬಲವಂತ ಮಾಡಿ ಸುಚಿತ್ರಾಳನ್ನು ಕುಂತಿಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದಾನೆ .ಅಲ್ಲಿ ಮತ್ತೆ ಜಗಳ ನಡೆದು ಪೂರ್ವ ಯೋಜನೆಯಂತೆ ತನ್ನ ಜೊತೆ ತಂದಿದ್ದ ಚಾಕುವಿನಿಂದ ಗೆಳತಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
6
+ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳದಲ್ಲಿ ಸಿಕ್ಕ ಮೊಬೈಲ್ ಆಧಾರದ ಮೇಲೆ ಆರೋಪಿಯನ್ನಿ ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ,ತನಿಖೆ ಮುಂದುವರೆದಿದೆ.
eesanje/url_46_311_8.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಅಶೋಕ್-ಅಶ್ವತ್ಥ್ ಪೈಪೋಟಿ
2
+ ಬೆಂಗಳೂರು,ನ.17- ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳ ಬಳಿಕ ವಿಧಾನಮಂಡಲದ ಉಭಯ ಸದನಗಳಿಗೆ ಪ್ರತಿಪಕ್ಷದ ನಾಯಕನ ಆಯ್ಕೆಗೆ ನಡೆದ ಶಾಸಕಾಂಗ ಸಭೆಯಲ್ಲಿ ಹಲವರ ಹೆಸರುಗಳು ಪ್ರಸ್ತಾಪವಾಗಿದ್ದು, ಅಂತಿಮವಾಗಿ ನಾಯಕ ಯಾರು ಎಂಬುದನ್ನು ಹೈಕಮಾಂಡ್ ಘೋಷಣೆ ಮಾಡಲಿದೆ.
3
+ ಖಾಸಗಿ ಹೋಟೆಲ್‍ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕೇಂದ್ರದಿಂದ ಚುನಾವಣಾವೀಕ್ಷಕರಾಗಿ ಆಗಮಿಸಿದ್ದ ಹಾಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್‍ಕುಮಾರ್ ಗೌತಮ್ ಅವರುಗಳು ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ.
4
+ ವಿಧಾನಸಭೆ ಮತ್ತು ವಿಧಾನಪರಿಷತ್ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿರುವುದರಿಂದ ಶಾಸಕರ ಅಭಿಪ್ರಾಯವನ್ನು ಪಡೆದಿರುವ ವೀಕ್ಷಕರು ಪಕ್ಷದ ವರಿಷ್ಠರಿಗೆ ವರದಿ ನೀಡಿದ ಬಳಿಕ ಒಂದೆರಡು ದಿನಗಳಲ್ಲಿ ಅಂತಿಮ ಹೆಸರು ಘೋಷಣೆಯಾಗಲಿದೆ.
5
+ ಪ್ರತಿಪಕ್ಷದ ನಾಯಕನ ರೇಸ್‍ನಲ್ಲಿ ಒಕ್ಕಲಿಗ ಸಮುದಾಯದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಮತ್ತು ಹಾಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಆರ್.ಅಶೋಕ್ ಹೆಸರು ಮುಂಚೂಣಿಯಲ್ಲಿದೆ.ಇದರ ಜೊತೆಗೆ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ, ಕಾರ್ಕಳದ ವಿ.ಸುನೀಲ್‍ಕುಮಾರ್, ತೀರ್ಥಹಳ್ಳಿಯ ಅರಗ ಜ್ಞಾನೇಂದ್ರ, ವಿಜಾಪುರದ ಬಸನಗೌಡ ಪಾಟೀಲ್ ಯತ್ನಾಳ್ ಹೆಸರುಗಳು ಕೂಡ ಪ್ರಸ್ತಾಪವಾಗಿದೆ.
6
+ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ವೀರಶೈವ ಲಿಂಗಾಯಿತ ಸಮುದಾಯಕ್ಕೆ ನೀಡಿರುವುದರಿಂದ ಒಕ್ಕಲಿಗ ಸಮುದಾಯಕ್ಕೆ ಪ್ರತಿಪಕ್ಷದ ನಾಯಕನ ಸ್ಥಾನ ಕೊಡಬೇಕೆಂಬ ಕೂಗು ಕೇಳಿಬಂದಿತ್ತು. ಮೂಲಗಳ ಪ್ರಕಾರ ಅಶೋಕ್‍ಗೆ ಕೆಲ ಹೆಚ್ಚಿನ ಶಾಸಕರು ಬೆಂಬಲವನ್ನು ಸೂಚಿಸಿದ್ದು, ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬೆಂಬಲವೂ ಸಿಕ್ಕಿದೆ ಎನ್ನಲಾಗುತ್ತಿದೆ.
7
+ ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ
8
+ ಈ ಮೊದಲು ಪ್ರತಿಪಕ್ಷದ ನಾಯಕನ ಸ್ಥಾನವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲವೇ ಯತ್ನಾಳ್ ಅವರಿಗೆ ನೀಡುವ ಬಗ್ಗೆ ಚಿಂತನೆ ಇತ್ತು. ಆದರೆ ವಿಜಯೇಂದ್ರ ಬಿಜೆಪಿ ಸಾರಥ್ಯ ವಹಿಸಿದ ಮೇಲೆ ಈ ಇಬ್ಬರ ಹೆಸರುಗಳು ಪಟ್ಟಿಯಿಂದ ಹೊರಗುಳಿದವು.ಆರ್.ಅಶೋಕ್ ಪ್ರತಿಪಕ್ಷದ ನಾಯಕನಾದರೆ ಹಿಂದುಳಿದ ಸಮುದಾಯದ ವಿ.ಸುನೀಲ್‍ಕುಮಾರ್ ಉಪನಾಯಕನಾಗುವ ಸಂಭವವಿದೆ.
9
+ ಒಂದು ಹೈಕಮಾಂಡ್ ಕಳಿಸಿರುವ ಹೆಸರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಕಟಿಸುವುದು ಅಥವಾ ಎರಡನೆಯದ್ದಾಗಿ ಶಾಸಕರ ಅಭಿಪ್ರಾಯ ಆಲಿಸಿ ಹೈಕಮಾಂಡ್ ನಾಯಕರ ಜೊತೆ ಸಂಪರ್ಕ ಮಾಡಿ ಹೆಸರನ್ನು ಅಂತಿಮಗೊಳಿಸಿ ಶಾಸಕಾಂಗ ಪಕ್ಷದ ಸಭೆಯಲ್ಲೇ ಹೆಸರು ಪ್ರಕಟಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದು ಸಾಧ್ಯವಾಗದಿದ್ದರೆ ವರಿಷ್ಠರೇ ಹೆಸರನ್ನು ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
10
+ ಡಾ.ಅಶ್ವತ್ಥನಾರಾಯಣ್ ನೇರ ಪ್ರತಿಪಕ್ಷ ಸ್ಥಾನ ಕೇಳದಿದ್ದರೂ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಯಾವ ಸ್ಥಾನ ಸಿಕ್ಕರೂ ನಿಭಾಯಿಸಲು ಸಿದ್ದವಾಗಿ ಕುಳಿತಿದ್ದಾರೆ. ಈಗಾಗಲೇ ರಾಜ್ಯಾಧ್ಯಕ್ಷರ ಆಯ್ಕೆ ಮುಗಿದಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.
11
+ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಪಕ್ಷ ನಾಯಕ ಸ್ಥಾನವನ್ನು ನೇರವಾಗಿ ಕೇಳದಿದ್ದರೂ ಪಕ್ಷ ನೀಡುವ ಯಾವುದೇ ಜವಾಬ್ದಾರಿ ನಿರ್ವಹಿಸುತ್ತೇನೆ. ಪ್ರತಿಪಕ್ಷ ನಾಯಕನ ಸ್ಥಾನ ನೀಡಿದರೂ ನಿರ್ವಹಿಸುವ ಅರ್ಹತೆ ನನಗಿದೆ ಎಂದು ತಮ್ಮ ಅಪೇಕ್ಷೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.
12
+ ಇನ್ನುಳಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ಅಧಿವೇಶನದಲ್ಲಿಯೇ ಪ್ರತಿಪಕ್ಷ ನಾಯಕನ ರೀತಿಯಲ್ಲಿ ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದರು, ಸದನದಲ್ಲಿ ಸಾಮಥ್ರ್ಯ ಪ್ರದರ್ಶಿಸಿ ಪ್ರತಿಪಕ್ಷ ನಾಯಕನ ಸ್ಥಾನದ ರೇಸ್‍ಗೆ ಬಂದಿದ್ದಾರೆ. ಹೈಕಮಾಂಡ್ ನಾಯಕರ ಮೇಲೆ ವಿಶ್ವಾಸ ವ್ಯಕ್ತಪಡಿಸಿ ಪ್ರತಿಪಕ್ಷ ನಾಯಕನ ಸ್ಥಾನದ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದಾರೆ.
13
+ ಇವರ ಜೊತೆ ಮಾಜಿ ಸಚಿವ ಸುನೀಲ್‍ಕುಮಾರ್ ಕೂಡ ರೇಸ್‍ನಲ್ಲಿದ್ದಾರೆ. ಹಿಂದುಳಿದ ವರ್ಗದ ನಾಯಕ, ಉತ್ತಮ ವಾಗ್ಮಿಯೂ ಆಗಿರುವ ಸುನೀಲ್‍ಕುಮಾರ್ ಯಾವ ಬಣದಲ್ಲಿಯೂ ಗುರುತಿಸಿಕೊಳ್ಳದೇ ಪಕ್ಷದ ಪರವಾಗಿ ದನಿ ಎತ್ತುತ್ತಾ ಬಂದಿದ್ದು, ಈ ಬಾರಿ ಪ್ರತಿಪಕ್ಷ ನಾಯಕನ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.
14
+ ಆರ್.ಅಶೋಕ್‍ಗೆ ಅವಕಾಶ ನೀಡಿದರೆ ರಾಜ್ಯಾಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ನಡುವೆ ಸಮನ್ವಯತೆ ಸಮಸ್ಯೆ ಎದುರಾಗುವ ಸಾಧ್ಯತೆ ಕಡಿಮೆ. ಹೀಗಾಗಿ ಅಶೋಕ್‍ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.ಹಾಗಂತ ಅಶ್ವತ್ಥನಾರಾಯಣ್ ಅವರನ್ನು ಕಡೆಗಣಿಸಲೂ ಸಾಧ್ಯವಿಲ್ಲ. ಡಿಸಿಎಂ ಡಿಕೆ.ಶಿವಕುಮಾರ್‍ಗೆ ಠಕ್ಕರ್ ಕೊಡುತ್ತಲೇ ಬಂದಿರುವ ಅಶ್ವತ್ಥನಾರಾಯಣ್‍ಗೆ ಅವಕಾಶ ನೀಡಿದರೂ ಅಚ್ಚರಿ ಇಲ್ಲ ಎನ್ನುವುದು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.
15
+ ಪರಿಷತ್‍ಗೆ ಕೋಟಾ?:ವಿಧಾನಪರಿಷತ್ ಪ್ರತಿಪಕ್ಷ ನಾಯಕರ ಸ್ಥಾನಕ್ಕೂ ಹೆಸರನ್ನು ಪ್ರಕಟಿಸಲಾಗುತ್ತದೆ. ಒಮ್ಮೆ ಪ್ರತಿಪಕ್ಷ ನಾಯಕರಾಗಿ ಸಭಾ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಕೆಲಸ ಮಾಡಿರುವ ಹಿನ್ನೆಲೆ ಈ ಬಾರಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ. ಆದರೆ ಇಲ್ಲಿ ಅಷ್ಟಾಗಿ ರಾಜಕೀಯ ಲೆಕ್ಕಾಚಾರ ಹಾಕುವುದಿಲ್ಲ, ಪಕ್ಷದ ಮೂಲಗಳ ಪ್ರಕಾರ, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅಥವಾ ಮಹಿಳೆಗೆ ಅವಕಾಶ ನೀಡಲು ನಿರ್ಧರಿಸಿದರೆ ತೇಜಸ್ವಿನಿಗೌಡ ಅವರಿಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.
16
+ ನಾಳೆ ನಡೆಯುವ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸುವಂತೆ ಪಕ್ಷದ ಎಲ್ಲ ಶಾಸಕರು ಹಾಗೂ ���ಿಧಾನ ಪರಿಷತ್ ಸದಸ್ಯರಿಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಆಹ್ವಾನ ಕಳಿಸಿದ್ದು, ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ನಿಕಟಪೂರ್ವ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
eesanje/url_46_311_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಮುಸ್ಲಿಂ ಖಾದರ್‌ಗೆ ಬಿಜೆಪಿಯ ದೊಡ್ಡ ನಾಯಕರು ನಮಸ್ಕರಿಸುತ್ತಾರೆ : ಸಚಿವ ಜಮೀರ್
2
+ ಬೆಂಗಳೂರು,ನ.17-ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯು.ಟಿ.ಖಾದರ್‌ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆ ಎನ್ನುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
3
+ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, ಹೈದರಾಬಾದ್‍ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್‍ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಹೇಳಿದ್ದಾರೆ.
4
+ ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.
5
+ ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದ್ದಾರೆ.
6
+ ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ
7
+ ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು.
8
+ ಕಣಿವೆಯಲ್ಲಿ ಮುಂದುವರೆದ ಉಗ್ರ ಬೇಟೆ
9
+ ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.
eesanje/url_46_312_1.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಬಿಜೆಪಿ-ಜೆಡಿಎಸ್ ನಾಯಕರ ಹತಾಶೆಯಿಂದ ಗೊಂದಲ ಸೃಷ್ಟಿ: ಡಿಕೆಶಿ
2
+ ಬೆಂಗಳೂರು,ನ,16- ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಸಂಭಾಷಣೆಯಲ್ಲಿ ಅಧಿಕಾರಿಗಳ ವರ್ಗಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಹತಾಶೆ ಹಾಗೂ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್- ಬಿಜೆಪಿಯವರಿಗೆ ಕೆಲಸ ಇಲ್ಲ. ಯತೀಂದ್ರ ಸಿದ್ದರಾಮಯ್ಯ ಕೆಡಿಪಿ ಸದಸ್ಯರಾಗಿದ್ದಾರೆ. ಕ್ಷೇತ್ರದಲ್ಲಿ ಆಶ್ರಯ ಸಮಿತಿಯ ಅಧ್ಯಕ್ಷರು. ಜನಸಂಪರ್ಕ ಸಭೆ ನಡೆಸುವಾಗ ಫೋನಿನಲ್ಲಿ ಮಾತನಾಡಿದ್ದಾರೆ. ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಕೆಲವು ಶಾಲೆಗಳಿಗೆ ಕುರ್ಚಿ, ಬೆಂಚುಗಳನ್ನು ಪೂರೈಸುವ ಪ್ರಯತ್ನ ನಡೆಯುತ್ತಿದೆ. ಆ ಪಟ್ಟಿ ತಯಾರಿಸುವಾಗ ವಿವೇಕಾನಂದ ಎಂಬ ಅಧಿಕಾರಿ ಒಂದೆರಡು ಹೆಸರುಗಳನ್ನು ಬದಲಾವಣೆ ಮಾಡಿದ್ದಾರೆ. ಸ್ಥಳೀಯರು ಈ ಬಗ್ಗೆ ಯತೀಂದ್ರ ಅವರಿಗೆ ದೂರು ನೀಡಿದ್ದಾರೆ. ಚುನಾವಣೆ ವೇಳೆ ಮಾತುಕೊಟ್ಟಂತೆ ಶಾಲೆಗಳನ್ನು ಅಭಿವೃದ್ಧಿಪಡಿಸುವುದು ಸ್ಥಳೀಯ ಜನಪ್ರತಿನಿಧಿಗಳ ಕರ್ತವ್ಯ. ಯತೀಂದ್ರ ಅದರಂತೆ ನಡೆದುಕೊಂಡಿದ್ದಾರೆ ಎಂದರು.
4
+ ತಂದೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಪರವಾಗಿ ಯತೀಂದ್ರ ವರುಣಾ ಕ್ಷೇತ್ರವನ್ನು ನೋಡಿಕೊಳ್ಳುತ್ತಿದ್ದಾರೆ. ಫೋನ್‍ನಲ್ಲಿ ಮಾತನಾಡುವಾಗ ಎಲ್ಲಿಯೂ ಅಧಿಕಾರಿಗಳ ಹೆಸರು ಹಾಗೂ ಹುದ್ದೆ ಪ್ರಸ್ತಾಪವಾಗಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜೆಡಿಎಸ್-ಬಿಜೆಪಿಯವರು ವರ್ಗಾವಣೆ ದಂಧೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
5
+ ವರ್ಗಾವಣೆ ನಿಂತು ಬಹಳ ದಿನವಾಗಿದೆ. ದಂಧೆ ಎಲ್ಲಿ ನಡೆಯುತ್ತಿದೆ ಎಂಬುದನ್ನು ತೋರಿಸಿ ಎಂದು ಸವಾಲು ಹಾಕಿದ ಡಿ.ಕೆ.ಶಿವಕುಮಾರ್, ಯತೀಂದ್ರ ಮಾಜಿ ಶಾಸಕರಾಗಿದ್ದಾರೆ. ಒಂದು ವೇಳೆ ತಮ್ಮ ಕ್ಷೇತ್ರಕ್ಕೆ ಕೆಲಸ ಮಾಡಲು ನಾಲ್ಕೈದು ಅಧಿಕಾರಿಗಳು ಬೇಕು ಎಂದು ಕೇಳಿದ್ದರೂ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.
6
+ ಯತೀಂದ್ರ ವಿಡಿಯೋ ಅಪಪ್ರಚಾರ: ಸಿಎಂ ಅಸಮಾಧಾನ
7
+ ಮುಖ್ಯಮಂತ್ರಿ ಯಾದವರಿಗೆ ತಮ್ಮ ಕ್ಷೇತ್ರ ನೋಡಿಕೊಳ್ಳಲು ಕಷ್ಟವಾಗುತ್ತಿದೆ. ಉಪ ಮುಖ್ಯಮಂತ್ರಿಯಾದ ನನಗೂ ನನ್ನ ಕ್ಷೇತ್ರಕ್ಕೆ ನಿಯಮಿತವಾಗಿ ಭೇಟಿ ನೀಡಲು ಆಗುತ್ತಿಲ್ಲ. ಹೀಗಾಗಿ ತಮ್ಮ ಸಹೋದರರೂ ಆಗಿರುವ ಸಂಸದ ಡಿ.ಕೆ.ಸುರೇಶ್ ಅವರು ಕ್ಷೇತ್ರದ ಜನರ ಅಹವಾಲು ಕೇಳುತ್ತಾರೆ. ಮನೆಯ ಬೇಡಿಕೆ ಸೇರಿದಂತೆ ಹಲವಾರು ಮನವಿಗಳನ್ನು ಆಧರಿಸಿ ಫಲಾನುಭವಿಗಳ ಆಯ್ಕೆಯಾಗುತ್ತದೆ. ಆ ಪಟ್ಟಿಯನ್ನು ಪರಿಶೀಲಿಸಿ ತಾವು ಸಹಿ ಹಾಕುವುದು ಸಾಮಾನ್ಯ ಎಂದರು.
8
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 40 ವರ್ಷಗಳ ರಾಜಕೀಯ ಪ್ರಜ್ಞೆ ಇದೆ. ಅವರನ್ನು ಯಾರೂ ದಾರಿ ತಪ್ಪಿಸಲು ಆಗುವುದಿಲ್ಲ. ಬಿಜೆಪಿ ��ಾಗೂ ಜೆಡಿಎಸ್‍ನವರಿಂದ ಸಿದ್ದರಾಮಯ್ಯ ಪಾಠ ಕಲಿಯಬೇಕಾಗಿಲ್ಲ ಎಂದು ಹೇಳಿದರು.
9
+ ಜೆಡಿಎಸ್‍ನ ಶಾಸಕರು ನಿನ್ನೆ ರಾತ್ರಿ ತಮ್ಮನ್ನು ಭೇಟಿಯಾಗಿಲ್ಲ. ಕ್ಷೇತ್ರದ ಅಭಿವೃದ್ದಿ ಕೆಲಸಗಳಿದ್ದರೆ ಬರುತ್ತಾರೆ. ನಾವು ತುರ್ತಾಗಿ ಕೆಲಸ ಮಾಡಿಕೊಡುತ್ತೇವೆ. ಅದರ ಹೊರತಾಗಿ 13 ಮಂದಿ ಜೆಡಿಎಸ್ ಶಾಸಕರು ಕಾಂಗ್ರೆಸ್‍ಗೆ ಬರುತ್ತಾರೆ ಎಂಬುದೆಲ್ಲಾ ವದಂತಿ. ಸದ್ಯಕ್ಕೆ ಯಾವ ಶಾಸಕರೂ ಬರುವುದಿಲ್ಲ. ಯಾರೂ ತಮ್ಮನ್ನು ಭೇಟಿ ಮಾಡಿಲ್ಲ ಎಂದು ಪುನರುಚ್ಚರಿಸಿದರು.
10
+ ಜೆಡಿಎಸ್‍ನ ಮಾಜಿ ಮುಖ್ಯಮಂತ್ರಿಕುಮಾರಸ್ವಾಮಿಯವರು ಹತಾಷೆಯಿಂದ ಆರೋಪಗಳನ್ನು ಮಾಡುತ್ತಿದ್ದಾರೆ. ತಮ್ಮ ವಿರುದ್ಧ ಟೀಕೆ ಮಾಡುವಾಗ ಜಮೀನುಗಳಿಗೆ ಬೇಲಿ ಹಾಕಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಎಲ್ಲಿ, ಯಾವ ಜಮೀನು, ಯಾವ ಬೇಲಿ, ಯಾವ ಬಂಡೆ, ಯಾವ ಕಲ್ಲು ಎಂಬುದನ್ನು ತೋರಿಸಲಿ ಎಂದು ತಿರುಗೇಟು ನೀಡಿದರು.
11
+ ಅಕ್ರಮ ವಿದ್ಯುತ್ ಸಂಪರ್ಕಕ್ಕೆ ಸಂಬಂಧ ಪಟ್ಟಂತೆ ಕುಮಾರಸ್ವಾಮಿಯವರೇ ತಪ್ಪು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಯಾರೋ ಗುತ್ತಿಗೆದಾರನಿಗೆ ಮನೆ ಅಲಂಕಾರ ಮಾಡಲು ಹೇಳಿರಬಹುದು. ಆತ ತಪ್ಪು ಮಾಡಿರುತ್ತಾನೆ. ಕಾರು ನನ್ನ ಹೆಸರಿನಲ್ಲಿ ನೋಂದಣಿಯಾಗಿದೆ. ಚಾಲಕ ಅಪಘಾತ ಮಾಡಿದರೆ ಡಿ.ಕೆ.ಶಿವಕುಮಾರ್ ಕಾರು ಅಪಘಾತವಾಗಿದೆ ಎಂದೇ ಹೇಳುತ್ತಾರೆ. ಚಾಲಕ ಅಪಘಾತ ಮಾಡಿದ್ದಾನೆ ಎಂದು ಹೇಳುವುದಿಲ್ಲ. 25 ವರ್ಷಗಳ ಹಿಂದೆ ಇಂಥದ್ದೇ ಪ್ರಕರಣವೊಂದು ತಮ್ಮ ಜೀವನದಲ್ಲಿ ನಡೆದಿತ್ತು ಎಂದು ಉದಾಹರಣೆ ಕೊಟ್ಟರು.
12
+ ಡಿ.4 ರಿಂದ ಬೆಳಗಾವಿಯಲ್ಲಿ ಅಧಿವೇಶನ, ಗಲಾಟೆ ‘ಗ್ಯಾರಂಟಿ’
13
+ ಕುಮಾರಸ್ವಾಮಿಯವರು ಪ್ರತಿಬಾರಿಯೂ ಲೂಟಿ.. ಲೂಟಿ.. ಎಂದು ಹೇಳುತ್ತಾರೆ. ಅವರ ಅನುಭವ ಆಚಾರ-ವಿಚಾರಗಳನ್ನು ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು. ಬಿಜೆಪಿಗೆ ಈಗಷ್ಟೇ ಹೊಸ ಅಧ್ಯಕ್ಷರ ನೇಮಕವಾಗಿದೆ. ಅಸಮಾಧಾನ ಹೊಂದಿರುವವರ ಕೈ-ಕಾಲು ಕಟ್ಟಿ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾಗಿ ಪಕ್ಷ ಸಂಘಟನೆ ಮಾಡಬೇಕು ಎಂದು ಪ್ರಶ್ನೆಯೊಂದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಿದರು.
eesanje/url_46_312_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಒಂದೇ ಕುಟುಂಬದ ನಾಲ್ವರನ್ನು ಕೊಂದಿದ್ದ ಹಂತಕನ ಬಂಧನ
2
+ ಬೆಂಗಳೂರು,ನ.15-ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ ಹಂತಕನನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮಹಾರಾಷ್ಟ್ರದ ಸಾಂಗ್ಲಿ ನಿವಾಸಿ ಪ್ರವೀಣ್ ಅರುಣ್ ಚೌಗಲೆ (37) ಬಂತ ಹಂತಕ. ಈತ ಮಂಗಳೂರು ಏರ್ ಪೋರ್ಟ್ ಉದ್ಯೋಗಿ.
3
+ ಉಡುಪಿ ತಾಲ್ಲೂಕಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಹಸೀನಾ(46),ಅತ್ತೆ ಹಾಜಿರಾ, ಇಬ್ಬರು ಹೆಣ್ಣುಮಕ್ಕಳಾದ ಅಫ್ನಾನ್ (23) ಅಜ್ಞಝ್ (21) ಮತ್ತು ಪುತ್ರ ಆಸೀಂ (12) ವಾಸವಾಗಿದ್ದರು. ಇವರ ಪತಿ ನೂರ್ ಮಹಮ್ಮದ್ ದುಬೈನಲ್ಲಿ ನೆಲೆಸಿದ್ದರೆ, ಇವರ ಮೊದಲ ಮಗ ಬೆಂಗಳೂರಿನಲ್ಲಿ ಏರ್ ಪೋರ್ಟ್ ಉದ್ಯೋಗಿ.
4
+ ನ.12ರಂದು ಬೆಳಗ್ಗೆ 8.30 ಸುಮಾರಿನಲ್ಲಿ ಹಂತಕ ಆಟೋದಲ್ಲಿ ಇವರ ಮನೆ ಬಳಿ ಡ್ರಾಪ್ ಪಡೆದುಕೊಂಡಿದ್ದಾನೆ. ನಂತರ ಮನೆಯೊಳಗೆ ಹೋಗಿದ್ದು ಅಡುಗೆ ಮನೆಯಲ್ಲಿದ್ದ ಹಸೀನಾಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಇಬ್ಬರೂ ಹೆಣ್ಣು ಮಕ್ಕಳನ್ನು ಸಾಯಿಸಿದ್ದಾನೆ. ಅಷ್ಟಕ್ಕೆ ಸುಮ್ಮನಾಗದ ಆರೋಪಿ ಹೊರಗೆ ಆಟವಾಡುತ್ತಿದ್ದ ಬಾಲಕ ಆಸೀಂ ಮನೆಯೊಳಗೆ ಬರುತ್ತಿದ್ದಂತೆ ಆತನಿಗೂ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
5
+ ಮನೆಯೊಳಗೆ ನಡೆಯುತ್ತಿದ್ದ ಕೊಲೆಯನ್ನು ತಪ್ಪಿಸಲು ತಡೆಯಲು ಬಂದ ಹಸೀನಾ ಅವರ ಅತ್ತೆ ಹಾಜಿರಾ ಅವರ ಮೇಲೂ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದಾಗ ಇವರ ಮನೆಯಿಂದ ಕಿರುಚಾಟ, ಕೂಗಾಟ ಕೇಳಿ ನೆರೆಮನೆಯ ಯುವತಿ ಇವರ ಮನೆ ಬಳಿ ಬಂದಾಗ ಆರೋಪಿ ಆಕೆಗೆ ಚಾಕು ತೋರಿಸಿ ಹೆದರಿಸಿ ಪರಾರಿಯಾಗಿದ್ದನು.
6
+ ಸುದ್ದಿ ತಿಳಿದು ಉಡುಪಿ ಜಿಲ್ಲೆಯ ಮಲ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ನಾಲ್ವರ ಮೃತದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದು ಕಂಡು ಬಂದಿತ್ತು. ಎಫ್ಎಸ್ಎಲ್ ತಂಡ ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ.
7
+ ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಪರ್ವ ಆರಂಭ
8
+ ಚಾಕುವಿನಿಂದ ಇರಿತಕ್ಕೊಳಗಾಗಿ ಗಾಯಗೊಂಡಿದ್ದ ಹಾಜಿರಾ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಸುದ್ದಿ ತಿಳಿದು ದುಬೈನಿಂದ ಹಸೀನಾ ಅವರ ಪತಿ ನೂರ್ ಮಹಮ್ಮದ್ ಹಾಗೂ ಬೆಂಗಳೂರು ಏರ್ ಪೋರ್ಟ್ ಉದ್ಯೋಗಿಯಾಗಿರುವ ಮೊದಲನೆಯ ಮಗ ಮನೆಗೆ ಬಂದು ಕಣ್ಣೀರು ಹಾಕಿದ್ದರು.
9
+ ಐದು ತಂಡ ರಚನೆಆರೋಪಿ ಪತ್ತೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ ಹಸೀನಾ ಮನೆಯ ಬಳಿ ವ್ಯಕ್ತಿಯೊಬ್ಬನಿಗೆ ಆಟೋ ಚಾಲಕರೊಬ್ಬರು ಡ್ರಾಪ್ ಕೊಟ್ಟಿರುವುದಾಗಿ ಹೇಳಿದ ಮಾಹಿತಿ ಮೇರೆಗೆ ತನಿಖೆ ಚುರುಕುಗೊಳಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದರು.
10
+ ಆರೋಪಿಯು ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಕುಡಚಿಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ತಾ��ತ್ರಿಕ ಆಧಾರದಲ್ಲಿ ಪತ್ತೆ ಹಚ್ಚಿದ ಪೊಲೀಸ್ ತಂಡ ತಕ್ಷಣ ಅಲ್ಲಿಗೆ ತೆರಳಿ ಕಾರ್ಯಾಚರಣೆ ಕೈಗೊಂಡು ಸಂಬಂಕರ ಮನೆಯಲ್ಲಿ ಅವಿತುಕೊಂಡಿದ್ದ ಆರೋಪಿಯನ್ನು ಬಂಧಿಸಿ ಮಲ್ಪೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
11
+ ಪ್ರೇಮ ವೈಫಲ್ಯ ಶಂಕೆಹಸೀನಾ ಅವರ ಎರಡನೇ ಮಗಳು ಮಂಗಳೂರು ಏರ್ ಪೋರ್ಟ್ ನಲ್ಲಿ ಏರ್ ಹೋಸ್ಟರ್ ವೃತ್ತಿ ಮಾಡುತ್ತಿದ್ದು, ಅದೇ ವಿಮಾನ ನಿಲ್ದಾಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಕೆಲಸ ಮಾಡುತ್ತಿದ್ದಾಗ ಆಕೆಯ ಪರಿಚಯವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೇಮ ವೈಫಲ್ಯದಿಂದಾಗಿ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಆರೋಪಿ ಪ್ರವೀಣ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.
eesanje/url_46_312_11.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಪರ್ವ ಆರಂಭ
2
+ ಬೆಂಗಳೂರು,ನ.15- ಕಳೆಗುಂದಿದ್ದ ಪಕ್ಷಕ್ಕೆ ಹೊಸ ಚೈತನ್ಯ ನೀಡುವ ದೃಢಸಂಕಲ್ಪ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸುವ ಪ್ರಜ್ಞೆಯೊಂದಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು.
3
+ ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿಂದು ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ಪದಗ್ರಹಣ ಮಾಡಿದರು. ನಿರ್ಗಮಿತ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಪಕ್ಷದ ಬಾವುಟ ನೀಡಿ ವಿದ್ಯುಕ್ತವಾಗಿ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.
4
+ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದು, ರಾಜ್ಯದಲ್ಲಿ ಇಂದಿನಿಂದ ವಿಜಯೇಂದ್ರ ಪರ್ವ ಆರಂಭವಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಪುಟಿದೇಳಲು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಲ್ಪಿಸಿದೆ.
5
+ ವಿಜಯೇಂದ್ರಗೆ ಬೆಂಗಾವಲಾಗಿ ಕೆಲಸ ಮಾಡುತ್ತೇನೆ : ಕಟೀಲ್
6
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಬಲ ಸಮುದಾಯ ವೀರಶೈವ ಲಿಂಗಾಯುತ ಸಮುದಾಯ ಹಿಂದೆ ಸರಿದಿದ್ದರಿಂದ ಪಕ್ಷಕ್ಕೆ ಹೀನಾಯ ಸೋಲುನ್ನುಂಟಾಗಿತ್ತು. ಮತ್ತೆ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಣೆ ಹಾಕಿತ್ತು. ಹಲವು ಹಿರಿಯ ನಾಯಕರ ಅಸಮಾಧಾನದೊಂದಿಗೆ ಇದೀಗ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿ ಅಧಿಕಾರ ಸ್ವೀಕರಿಸಿದ್ದು, 2024ರ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮಹತ್ವದ ಹೊಣೆಗಾರಿಕೆ ಬಿ.ವೈ.ವಿ ಅವರ ಮೇಲಿದೆ.
7
+ ಮುಖಂಡರಾದ ವಿ. ಸೋಮಣ್ಣ, ಸಿ.ಟಿ. ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಬಹಿರಂಗವಾಗಿ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿಲ್ಲವಾದರೂ ಆಂತರಿಕವಾಗಿ ಅಸಮಾಧಾನಗೊಂಡಿದ್ದು, ಮುಂದಿನ ದಿನಗಳಲ್ಲಿ ಸಹಕಾರ ನೀಡಲಿದ್ದಾರೆಯೇ ಎಂಬುವುದು ಯಕ್ಷಪಪ್ರಶ್ನೆಯಾಗಿದೆ.
8
+ ಇಂದು ಬೆಳಿಗ್ಗೆ ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಪಕ್ಷದ ಕಚೇರಿಗೆ ವಿಜಯೇಂದ್ರ ಅವರು ಆಗಮಿಸಿದರು.ಈ ವೇಳೆ ಹಿರಿಯ ನಾಯಕರು, ಕಾರ್ಯಕರ್ತರು ಹೂಗುಚ್ಛ ನೀಡಿ ಅಭಿನಂದನೆಗಳ ಸುರಿಮಳೆ ಗೈದರು.
9
+ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬಿ.ವೈ. ರಾಘವೇಂದ್ರ, ಜಿಎಸ್ ಬಸವರಾಜ್, ಮಾಜಿ ಸಚಿವರಾದ ಕ��. ಗೋಪಾಲಯ್ಯ, ಆರ್. ಆಶೋಕ್, ಈಶ್ವರಪ್ಪ , ಕಾರಜೋಳ ಸೇರಿದಂತೆ ಹಾಲಿ ಶಾಸಕರು, ನಾಯಕರು, ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.
eesanje/url_46_312_12.txt ADDED
@@ -0,0 +1,6 @@
 
 
 
 
 
 
 
1
+ ವಿಜಯೇಂದ್ರಗೆ ಬೆಂಗಾವಲಾಗಿ ಕೆಲಸ ಮಾಡುತ್ತೇನೆ : ಕಟೀಲ್
2
+ ಬೆಂಗಳೂರು,ನ.15- ಬಿಜೆಪಿ ಪಕ್ಷವನ್ನು ನಾಲ್ಕು ವರ್ಷ ಮೂರು ತಿಂಗಳ ಕಾಲ ಯಶಸ್ವಿಯಾಗಿ ನಿಭಾಯಿಸಿದ ಸಮಾಧಾನ ನನಗಿದೆಯೆಂದು ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
3
+ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನಾನು ಪಕ್ಷದ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಸೌಭಾಗ್ಯ ಸಿಕ್ಕಿತ್ತು, ಇದನ್ನು ನಿಸ್ವಾರ್ಥವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇನೆಂಬ ತೃಪ್ತಿಯಿದೆ ಎಂದರು.
4
+ ಕೋವಿಡ್ ಸಂದರ್ಭದಲ್ಲಿ ನಾವು ಸೇವಾ ಕಾರ್ಯದ ರೂಪದಲ್ಲಿ ಜನತೆಗೆ ಸ್ಪಂದಿಸುವಂತಹ ಕಾರ್ಯ ಮಾಡಿದ್ದೇವೆ, ಕೇಂದ್ರ ನಾಯಕರು ನಮಗೆ ನೀಡಿದ ನಿರ್ದೇಶನದಂತೆ ಈ ಮಹಾಮಾರಿ ವಿರುದ್ಧ ಹೋರಾಟದಲ್ಲಿ ನಮ್ಮ ಕಾರ್ಯಕರ್ತರು ಹಗಲಿರುಳು ದುಡಿದಿದ್ದಾರೆ ಎಂದರು.ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರು ಮುಂದಿನ ದಿನಗಳಲ್ಲಿ ಎಲ್ಲರ ಜೊತೆಗೆ ಸೇರಿ ಯಶಸ್ವಿಯಾಗಿ ಪಕ್ಷವನ್ನು ಮುನ್ನಡೆಸುತ್ತಾರೆಂಬ ವಿಶ್ವಾಸ ಇದೆ. ಅವರ ಬೆಂಗಾವಲಾಗಿ ಅವರ ಜೊತೆ ಸದಾ ನಾವು ಕೆಲಸ ಮಾಡುತ್ತೇವೆ ಎಂದರು.
5
+ ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ
6
+ ನನಗೆ ಸಹಕಾರ ನೀಡಿದ ಎಲ್ಲಾ ಹಿರಿಯರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನನಗೆ ನೀಡಿದ ಸಹಕಾರವನ್ನು ವಿಜಯೇಂದ್ರ ಅವರಿಗೂ ನೀಡುತ್ತೀರೆಂಬ ವಿಶ್ವಾಸವಿದೆ. ಎಲ್ಲರೂ ಜೊತೆಗೂಡಿ ವಿಜಯೇಂದ್ರ ಅವರಿಗೆ ಶಕ್ತಿ ತುಂಬಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆಲ್ಲೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
eesanje/url_46_312_2.txt ADDED
@@ -0,0 +1,4 @@
 
 
 
 
 
1
+ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆ
2
+ ಚಿತ್ರದುರ್ಗ, ನ.16- ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿದ್ದ ಅವರು ತಮ್ಮ ವಕೀಲರ ಮೂಲಕ ಹೈಕೋರ್ಟ್‍ಗೆ ಪ್ರಕರಣ ಸಂಬಂಧ ಜಾಮೀನು ಅರ್ಜಿ ಸಲ್ಲಿಸಿದ್ದರು.
3
+ ಕಳೆದ ನವೆಂಬರ್ 8ರಂದು ಫೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, 14 ತಿಂಗಳ ಕಾರಾಗೃಹ ವಾಸದ ನಂತರ ಇಂದು ಬಿಡುಗಡೆಯಾಗಿದ್ದಾರೆ.
4
+ ಷರತ್ತುಬದ್ಧ ಜಾಮೀನಿನಲ್ಲಿ ತಿಳಿಸಿರುವಂತೆ ಚಿತ್ರದುರ್ಗ ಜಿಲ್ಲಾ ಪ್ರವೇಶ ನಿಷೇಧವಾಗಿರುವುದರಿಂದ ಮುರುಘಾ ಶ್ರೀಗಳು ಎಲ್ಲಿಗೆ ತೆರಳುತ್ತಾರೆಂಬುವುದು ತಿಳಿದು ಬಂದಿಲ್ಲ. ಬಿಡುಗಡೆಯಾಗುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಅವರನ್ನು ಸಮಾಧಾನಪಡಿಸಿ ಕಾರಿನಲ್ಲಿ ಕರೆದೊಯ್ದಿದ್ದಾರೆ.
eesanje/url_46_312_3.txt ADDED
@@ -0,0 +1,7 @@
 
 
 
 
 
 
 
 
1
+ ಯತೀಂದ್ರ ವಿಡಿಯೋ ಅಪಪ್ರಚಾರ: ಸಿಎಂ ಅಸಮಾಧಾನ
2
+ ಬೆಂಗಳೂರು,ನ,16- ಮಾಜಿ ಶಾಸಕರೂ ಆಗಿರುವ ತಮ್ಮ ಪುತ್ರ ಡಾ.ಯತೀಂದ್ರ ಅವರು ಫೋನ್‍ನಲ್ಲಿ ಮಾತನಾಡುವಾಗ ಸಿಎಸ್‍ಆರ್ ನಿಯಡಿ ಶಾಲಾ ಕಟ್ಟಡಗಳ ದುರಸ್ತಿಯ ಬಗ್ಗೆ ಚರ್ಚೆ ಮಾಡಿದ್ದಾರೆ. ಅದನ್ನು ತಿರುಚಿ ವರ್ಗಾವಣೆಯ ಪಟ್ಟಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಮಾತನಾಡಿರುವುದರಲ್ಲಿ ಎಲ್ಲಿಯೂ ವರ್ಗಾವಣೆಯ ಪ್ರಸ್ತಾಪವಾಗಿಲ್ಲ. ನನ್ನ ರಾಜಕೀಯ ಜೀವನದಲ್ಲಿ ದುಡ್ಡು ತೆಗೆದುಕೊಂಡು ಒಂದೇ ಒಂದು ವರ್ಗಾವಣೆ ಮಾಡಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿಯಾಗುವುದಾಗಿ ಸವಾಲು ಹಾಕಿದರು.
4
+ ಬಂಧಿತ ಸಚಿವ ಸೆಂಥಿಲ್ ಬಾಲಾಜಿಗೆ ಆಂಜಿಯೋಗ್ರಾಮ್ ಮಾಡಲು ಸೂಚನೆ
5
+ ಯತೀಂದ್ರ ವರುಣಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯ ಸದಸ್ಯರ ಬಗ್ಗೆ ಚರ್ಚೆ ಮಾಡಲಾಯಿತು. ತಾವು ಆಯ್ಕೆಯಾಗಿರುವ ವರುಣಾ ಕ್ಷೇತ್ರವನ್ನು ನೋಡಿಕೊಳ್ಳಲು ಯತೀಂದ್ರ ಅವರಿಗೆ ಹೇಳಿದ್ದೇನೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‍ಆರ್)ಯಡಿ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ದುರಸ್ತಿ ಮಾಡಿಸಲಾಗುತ್ತಿದೆ. ಸಚಿವ ಎಚ್.ಸಿ.ಮಹದೇವಪ್ಪ ಈ ಪಟ್ಟಿ ನೀಡಿದ್ದಾರೆ. ಯತೀಂದ್ರ ಆ ಕುರಿತು ಚರ್ಚೆ ಮಾಡಿದರು ಎಂದು ಹೇಳಿದರು.
6
+ ಸಂಭಾಷಣೆ ವೇಳೆ ಎಲ್ಲಿಯೂ ವರ್ಗಾವಣೆ ಉಲ್ಲೇಖ ಇಲ್ಲ. ಆ ರೀತಿ ಹೇಳಿರುವ ವಿಡಿಯೋ ಇದ್ದರೆ ತೋರಿಸಿ. ನಾಲ್ಕೈದು ಹೆಸರುಗಳು ಎಂದರೆ ಅದು ವರ್ಗಾವಣೆಯ ಪಟ್ಟಿ ಅಲ್ಲ. ಶಾಲೆಗಳ ದುರಸ್ತಿಯ ಪಟ್ಟಿ ಎಂದು ಸಮರ್ಥಿಸಿಕೊಂಡರು.
7
+ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜಕೀಯಕ್ಕಾಗಿ ಆರೋಪ ಮಾಡುತ್ತಾರೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಯತೀಂದ್ರ ಮಾತನಾಡಿರುವುದರಲ್ಲಿ ಏನೋ ಇದೆ ಎಂದು ಭಾರೀ ಪ್ರಮಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು.
eesanje/url_46_312_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಸಿದ್ದರಾಮಯ್ಯಗೆ ಆತ್ಮಸಾಕ್ಷಿ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು :
2
+ ಬೆಂಗಳೂರು, ನ.16- ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗಳಲ್ಲಿ ಬಹಿರಂಗವಾಗಿರುವ ಮುಖ್ಯಮಂತ್ರಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಬಗ್ಗೆ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ವರ್ಗಾವಣೆ ದಂಧೆ ಆರೋಪಕ್ಕೆ ಈ ವಿಡಿಯೋಗಿಂತ ಮತ್ತೊಂದು ಸಾಕ್ಷಿ ಬೇಕೇ ಎಂದು ಪ್ರಶ್ನಿಸಿದರಲ್ಲದೆ, ಆತ್ಮಸಾಕ್ಷಿ ಇದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
4
+ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಪುತ್ರ ವಿಜಯೇಂದ್ರ ಅವರ ಮೇಲೆ ಶೇ. 20ರಷ್ಟು ಕಮಿಷನ್ ಆರೋಪವನ್ನು ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಮಾಡಿದ್ದರು. ದಾವಣಗೆರೆಯಲ್ಲಿ ಮಾಡಿದ್ದ ಈ ಆರೋಪಕ್ಕೆ ಯಾವ ಸಾಕ್ಷ್ಯವನ್ನು ಒದಗಿಸಿದ್ದರು ಎಂದು ಪ್ರಶ್ನಿಸಿದರು.
5
+ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪೇಸಿಎಂ ಪೋಸ್ಟರ್ ಹಾಕಿದ್ದರು. ಅದಕ್ಕೆ ಯಾವ ದಾಖಲೆ ನೀಡಿದ್ದರು ಎಂದ ಅವರು, ಯತೀಂದ್ರ ಅವರು ಯಾರೊಂದಿಗೆ ಮಾತನಾಡಿದ್ದಾರೆ, ಎಂಬುದನ್ನು ಬಹಿರಂಗ ಪಡಿಸಲಿ. ದೂರವಾಣಿಯಲ್ಲಿ ಅಪ್ಪ ಎಂದು ಯಾರನ್ನು ಕರೆದರು, ದೂರವಾಣಿ ಮಾಡಿ ಯತೀಂದ್ರ ಅವರನ್ನು ಕೇಳಿದ್ದು, ಮುಖ್ಯಮಂತ್ರಿ ಅಲ್ಲವೆ? ಎಂದು ವಿಡಿಯೋದಲ್ಲಿದೆ ಎನ್ನಲಾದ ಮಾಹಿತಿಯನ್ನು ಪ್ರಸ್ತಾಪಿಸಿದರು.
6
+ ಪಂಚರಾಜ್ಯಗಳ ಚುನಾವಣೆ : ನಾಳೆ ಮಧ್ಯಪ್ರದೇಶದಲ್ಲಿ ಮತದಾನ
7
+ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರು ಮಾಡಿದ ಆರೋಪದ ವಿಡಿಯೋವನ್ನು ಪ್ರದರ್ಶಿಸಿದ ಅವರು, ಮುಖ್ಯಮಂತ್ರಿಯಾದವರು ಪುತ್ರನನ್ನು ಕೇಳಿ ಆಡಳಿತ ನಡೆಸುವುದೇ, ವಿವೇಕಾನಂದ ಯಾರು? ಮಹದೇವ ಯಾರು ಎಂದು ಪ್ರಶ್ನಿಸಿದರು.
8
+ ಕಂಬದಿಂದ ವಿದ್ಯುತ್ ಕದಿಯುವ ದಾರಿದ್ರ್ಯ ನನಗೆ ಬಂದಿಲ್ಲ. ಆಚಾರ್ತುದಿಂದ ಉಂಟಾಗಿದ್ದ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದೇನೆ. ಆದರೂ ಜೆಡಿಎಸ್ ಕಚೇರಿಯ ಕಾಂಪೌಂಡ್‍ಗೆ ಆಕ್ಷೇಪಾರ್ಹ ಪೋಸ್ಟನ್ನು ಅಂಟಿಸಲಾಗಿದೆ ಎಂದರು. ವಿಜಯೇಂದ್ರ ಅವರನ್ನು ಅನಧಿಕೃತ ಸಿಎಂ ಎಂದು ಆರೋಪಿಸುತ್ತಿದ್ದ ನೀವು ಈಗ ಸೂಪರ್ ಸಿಎಂ ಯಾರು ಹೇಳಿ ಎಂದು ಪ್ರಶ್ನಿಸಿದರು.
9
+ ನಾಡಿನ ಜನತೆ ಒಳ್ಳೆಯ ರೀತಿಯಲ್ಲಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಲೂಟಿ ಮಾಡಲು ಅಲ್ಲ. ಯತೀಂದ್ರ ಅವರು ಶಾಲೆಗಳ ಸಿಎಸ್‍ಆರ್ ನಿ ಬಗ್ಗೆ ಮಾತನಾಡಿದ್ದಾರೆ. ವರ್ಗಾವಣೆ ಬಗ್ಗೆ ಅಲ್ಲ ಎನ್ನುವುದಾದರೆ ದಾಖಲೆಗಳನ್ನು ಜನರ ಮುಂದಿಡಿ. ಮೈಸೂರು ಜಿಲ್ಲೆಯ ಡಿಡಿಪಿಐಗೆ ಕಳುಹಿಸಿರುವ ಮಾಹಿತಿಯನ್ನು ಬಹಿರಂಗಪಡಿಸಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸ್ಥಾನ ಶಾಶ್ವತವಲ್ಲ. ಚುನಾವಣೆಗಾಗಿ ಕೆಲವರಿಂದ ಸಹಕಾರ ಪಡೆದಿದ್ದು, ನಾನು ಶೇ. 100ರಷ್ಟು ಶುದ್ಧನಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇನೆ ಎಂದರು.
10
+ ತನಿಖೆಗೆ ಸಿದ್ಧ:ನಮ್ಮ ಕುಟುಂಬದ ಆಸ್ತಿ ತನಿಖೆಗೆ ಈಗಲೂ ಸಿದ್ದ ಎಂದ ಅವರು, ದಾಸನಪುರ ಹೋಬಳಿಯಲ್ಲಿ ಮೂರುವರೆ ಎಕರೆ ಕೆರೆ ನುಂಗಿ ಹಾಕಿದವರು ಯಾರು ಎಂದು ಪ್ರಶ್ನಿಸಿದ ಅವರು, ನಮ್ಮ ಆಸ್ತಿಯ ಬಗ್ಗೆ ಆರೋಪ ಮಾಡಿದವರನ್ನೇ ಕೇಳಿ? ಸರ್ಕಾರದ ಆದೇಶವನ್ನು ಮಾರಾಟಕ್ಕೆ ಇಡಬೇಡಿ ಎಂದರು.
11
+ ಸಿದ್ದರಾಮಯ್ಯ ಅವರು ರಾಜಕೀಯ ಜೀವನದಲ್ಲಿ ಮಾಡಿರುವ ಯಾವ ಆರೋಪವನ್ನು ಸಾಬೀತುಪಡಿಸಿದ್ದಾರೆ ಎಂದು ಪ್ರಶ್ನಿಸಿದ ಅವರು, ನೈಸ್ ಸಂಸ್ಥೆಯ ಬಗ್ಗೆ ಸದನ ಸಮಿತಿ ನೀಡಿರುವ ವರದಿಯ ಶಿಫಾರಸ್ಸು ಏಕೆ ಅನುಷ್ಠಾನಗೊಳಿಸಿಲ್ಲ ಎಂದು ಪ್ರಶ್ನಿಸಿದರು.
12
+ ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸುದೀರ್ಘ ಪೋಸ್ಟ್ ಮಾಡಿದ್ದ ಅವರು ವರ್ಗಾವಣೆ ವಿಚಾರ ಎನ್ನಲಾದ ವಿಡಿಯೋ ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು.
13
+ ವಿಡಿಯೋ ಆದರಿಸಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ಆರೋಪಗಳ ಸುರಿ ಮಳೆಗೈದು ವರ್ಗಾವಣೆ ದಂಧೆ ನಡೆಯುತ್ತಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ, ವಿಧಾನಪರಿಷತ್ ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ರಮೇಶ್ ಗೌಡ ಉಪಸ್ಥಿತರಿದ್ದರು.
eesanje/url_46_312_5.txt ADDED
@@ -0,0 +1,7 @@
 
 
 
 
 
 
 
 
1
+ ಡಿ.4 ರಿಂದ ಬೆಳಗಾವಿಯಲ್ಲಿ ಅಧಿವೇಶನ, ಗಲಾಟೆ ‘ಗ್ಯಾರಂಟಿ’
2
+ ಬೆಂಗಳೂರು, ನ.16-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಡಿ.4ರಿಂದ ಹತ್ತು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.4ರಂದು ಬೆಳಿಗ್ಗೆ 11ಗಂಟೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಅವೇಶನಗಳು ಸಮಾವೇಶಗೊಳಲಿವೆ.
3
+ ಅಂದಿನಿಂದ ಡಿ.15ರವರೆಗೆ ಹತ್ತು ದಿನಗಳ ಅಧಿವೇಶನ ನಡೆಸಲು ನಿಗದಿಪಡಿಸಲಾಗಿದೆ. ಈ ಸಂಬಂಧ ವಿಧಾನಸಭೆ ಸಚಿವಾಲಯ ಅಕೃತ ಪ್ರಕಟಣೆ ಹೊರಡಿಸಿದೆ. ಪ್ರತಿ ವರ್ಷದಂತೆ ಎರಡು ವಾರ ಕಾಲ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಲಾಗುತ್ತದೆ. ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿದ್ದಾರೆ. ಉಭಯ ಸಚಿವಾಲಯಗಳು ಅಧಿವೇಶನಕ್ಕೆ ಸಿದ್ಧತೆ ಆರಂಭಿಸಿವೆ.
4
+ 16ನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಯ ಲೋಪ-ದೋಷಗಳು, ಬರಪರಿಸ್ಥಿತಿಯಿಂದ ಉಂಟಾಗಿರುವ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡದಿರುವುದು ಮೊದಲಾದ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗುತ್ತಿವೆ.
5
+ ಗುಂಡಿನ ಚಕಮಕಿ : ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್
6
+ ಹಾಗೆಯೇ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ತೀವ್ರ ಬರಪರಿಸ್ಥಿತಿ ಇದ್ದರೂ ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಸ್ಪಂಸುತ್ತಿಲ್ಲ ಎಂದು ಆರೋಪಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೂಡ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸಿದ್ಧತೆ ನಡೆಸಿದೆ.
7
+ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರು, ಗುಳೆ ಹೋಗದಂತೆ ಉದ್ಯೋಗ, ಜಾನುವಾರುಗಳ ಮೇವು, ವಿದ್ಯುತ್ ಅಭಾವ ಮೊದಲಾದ ಜ್ವಲಂತ ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರದ ವೇದಿಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
eesanje/url_46_312_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವಿವಾದಕ್ಕೀಡಾದ ಸಿಎಂ ಪುತ್ರ ಯತೀಂದ್ರರ ವಿಡಿಯೋ
2
+ ಬೆಂಗಳೂರು, ನ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮೊಬೈಲ್‍ನಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.
3
+ ವಿಡಿಯೋದಲ್ಲಿ ಚರ್ಚಿಸಲಾದ ಮಾಹಿತಿ ಯನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದಿವೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಗ್ರಾಮವೊಂದರಲ್ಲಿ ಜನ ಸಂಪರ್ಕ ಸಭೆ ನಡೆಸುವ ವೇಳೆ ಯತೀಂದ್ರ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಆರಂಭದಲ್ಲೇ ಹಲೋ ಅಪ್ಪಾ ಎಂದು ಮಾತು ಶುರು ಮಾಡಿದ್ದಾರೆ.
4
+ ಹಾಗಾಗಿ ಯತೀಂದ್ರ ಅವರು ಸಿದ್ದರಾಮಯ್ಯ ಅವರ ಜೊತೆಯಲ್ಲೇ ಮಾತನಾಡಿದ್ದಾರೆ ಎಂದು ಭಾವಿಸಲಾಗಿದೆ.ವಿವೇಕಾನಂದನಾ ಎಲ್ಲಿಗೆ… ಇಲ್ಲಪ್ಪ ಇದ್ಯಾವುದು ಕೊಟ್ಟಿಲ್ಲ. ಯಾರು ಆ ಮಹದೇವ್… ? ಕೊಡಿ ಅವನಿಗೆ, ಅದಕ್ಕೆ ಹೇಳಿದ್ದು, ಕೊಡಿ ಆ ಮಹದೇವ್‍ಗೆ ಹೇಳ್ತೀನಿ. ನಾನು ಕೊಟ್ಟಿರೋದೆ ಐದು, ಅಲ್ಲಿ ಕೊಡಿ ಅದು ಎಂದು ಹೇಳುತ್ತಾರೆ.
5
+ ಅತ್ತ ಕಡೆ ಮೊಬೈಲ್ ಕೈ ಬದಲಾದಂತೆ ಕಂಡು ಬರುತ್ತಿದ್ದು, ಹಲೋ ಮಹದೇವ್ ಎಂದು ಯತೀಂದ್ರ ಮಾತು ಮುಂದುವರೆಸುತ್ತಾರೆ. ಮಹದೇವ್ ಯಾಕೆ ಯಾವುದ್ಯಾವುದೋ ಕೊಡ್ತಾ ಇದ್ದೀರಿ.. ? ಮತ್ತೆ ಇದೆಲ್ಲಾ ಯಾರು ಕೊಡ್ತಿರೋದು, ಲಿಸ್ಟ್ ಅಲ್ಲಿ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ, ಅಷ್ಟೇ ಮಾತ್ರ ಮಾಡಿ, ಒಕೆ ಎಂದು ಹೇಳಿ ಯತೀಂದ್ರ ಮೊಬೈಲ್ ಅನ್ನು ಸಹಾಯಕರಿಗೆ ಕೊಡುತ್ತಾರೆ.
6
+ ಗುಂಡಿನ ಚಕಮಕಿ : ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್
7
+ ಈ ವಿಡಿಯೋ ಮತ್ತು ಆಡಿಯೋದಲ್ಲಿ ಕಂಡು ಬಂದಿರುವಂತೆ ನಾಲ್ಕೈದು ಹೆಸರುಗಳನ್ನು ಕೊಡಲಾಗಿದೆ. ಅಷ್ಟಕ್ಕೆ ಸೀಮಿತವಾಗಿ ಕೆಲಸವಾಗಬೇಕು, ಉಳಿದವನ್ನು ಪರಿಗಣಿಸಬಾರದು ಎಂದು ಯತೀಂದ್ರ ಸೂಚನೆ ನೀಡಿರುವುದು ಕಂಡು ಬಂದಿದೆ.
8
+ ಆ ವಿಡಿಯೋದಲ್ಲಿ ಹೇಳಿರುವಂತೆ ನಾಲ್ಕೈದು ಹೆಸರುಗಳು ವರ್ಗಾವಣೆಯೇ, ಗುತ್ತಿಗೆಯೇ, ನೇಮಕವೇ ಯಾವುದು ಎಂದು ಸ್ಪಷ್ಟವಾಗಿಲ್ಲ. ಸಬ್ ರಿಜಿಸ್ಟರ್ ಆಗಿದ್ದ ಮಹದೇವ್ ಸಿದ್ದರಾಮಯ್ಯ ಅವರ ಸಂಬಂಧಿ ಎನ್ನಲಾಗಿದೆ. ಅವರು ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಕರ್ತವ್ಯಾಕಾರಿಯನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯತೀಂದ್ರ ಅವರ ಜೊತೆಯಲ್ಲಿ ಮಾತನಾಡುವಾಗ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
9
+ ಈ ಮಾತುಕತೆ ಯಾವ ವಿಚಾರ ಕುರಿತು ಎಂಬುದು ಸ್ಪಷ್ಟವಾಗಿಲ್ಲ. ಬಿಜೆಪಿ ಇದನ್ನು ವರ್ಗಾವಣೆ ದಂಧೆ ಎಂದು ವ್ಯಾಖ್ಯಾನಿಸಿದೆ. ಯತೀಂದ್ರ ಮೊದಲಿನಿಂದಲೂ ಅಕಾರಿಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅದು ಮತ್ತೂ ಮುಂದುವರೆದಿದೆ, ಎಲ್ಲಾ ಕಾಲದಲ್ಲೂ ಇದು ನಡೆದಿದೆ. ಕಾಂಗ್ರೆಸ್ ಆಡಳಿತದಲ್ಲಿ ಇದು ಸ್ವಲ್ಪ ಹೆಚ್ಚಾಗಿದೆ ಎಂದು ಬಿಜೆಪಿ ನಾಯಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ.
10
+ ಬೆಳಗಾವಿ ವಿಧಾನಮಂಡಲದ��್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದು, ಅದಕ್ಕೂ ಮುನ್ನಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲು ಚರ್ಚಿಸುವುದಾಗಿ ತಿಳಿಸಿದ್ದಾರೆ. ಜೆಡಿಎಸ್ ಕೂಡ ಇದನ್ನು ವರ್ಗಾವಣೆ ದಂಧೆ ಎಂದು ಟೀಕಿಸಿದೆ.
eesanje/url_46_312_7.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು
2
+ ಬೆಂಗಳೂರು, ನ.16- ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಬೆಂಗಳೂರು-ಬೆಳಗಾವಿ ನಡುವೆ ಸಂಚರಿಸಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದು ಬೆಂಗಳೂರು-ಧಾರಾವಾಡ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲನ್ನು ಬೆಳಗಾವಿಯವರೆಗೂ ವಿಸ್ತರಿಸಲು ಮನವಿ ಮಾಡಿದ್ದರು, ಇದನ್ನು ಪರಿಣಿಸಿ ಬೆಂಗಳೂರು-ಧಾರಾವಾಡ ಮೂಲಕ ಬೆಳಗಾವಿಗೆ ರೈಲು ಸಂಚಾರ ನಡೆಸಲಿದೆ.
3
+ ರೈಲು ಸಂಖ್ಯೆ 20661 ಬೆಂಗಳೂರು ನಿಲ್ದಾಣದಿಂದ ಬೆಳಗ್ಗೆ 5.45ಕ್ಕೆ ಹೊರಟು ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 20662ಬೆಳಗಾವಿಯಿಂದ ಮಧ್ಯಾಹ್ನ 2ಕ್ಕೆ ಹೊರಟು ರಾತ್ರಿ 10.10ಕ್ಕೆ ಬೆಂಗಳೂರು ತಲುಪಲಿದೆ.
4
+ ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕಲೆಕ್ಷನ್ ಪ್ರಿನ್ಸ್ ಮಗ : ಹೆಚ್‌ಡಿಕೆ ಟೀಕೆ
5
+ ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಯಾವ ದಿನಾಂಕದಿಂದ ಸಂಚಾರ ವಿಸ್ತರಣೆಯಾಗಲಿದೆಯೆಂದು ತಿಳಿಸಿಲ್ಲವಾದರೂ ಅತಿ ಶೀಘ್ರದಲ್ಲೇ ಪ್ರಯಾಣಿಕರಿಗೆ ಇದರ ಉಪಯೋಗವಾಗಲಿದೆ. ಮನವಿಯನ್ನು ಪುರಷ್ಕರಿಸಿದ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಸಂಸದ ಈರಣ್ಣ ಕಡಾಡಿ ಅಭಿನಂದನೆ ಸಲ್ಲಿಸಿದ್ದಾರೆ.
eesanje/url_46_312_8.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ವಿಪಕ್ಷ ನಾಯಕನ ಆಯ್ಕೆಗೆ ನಾಳೆ ಬಿಜೆಪಿ ಶಾಸಕರ ಸಭೆ
2
+ ಬೆಂಗಳೂರು, ನ.16- ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ನಾಳೆ ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ಸುಮಾರು ಆರು ತಿಂಗಳಿಂದ ಬಾಕಿ ಉಳಿದಿರುವ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು ಆಗಮಿಸಲಿದ್ದಾರೆ. ಅವರು ಶಾಸಕರೊಂದಿಗೆ ಸಮಾಲೋಚನೆ ನಡೆಸಿ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಜವಾಬ್ದಾರಿ ಹೊರುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
3
+ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಲು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಳೆ (ನ.17) ಸಂಜೆ 6 ಗಂಟೆಗೆ ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್‍ನಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿಪಡಿಸಿದ್ದು, ಪಕ್ಷದ ಎಲ್ಲ ಶಾಸಕರು ಮತ್ತು ಪರಿಷತ್ ಸದಸ್ಯರು ತಪ್ಪದೇ ಭಾಗವಹಿಸಬೇಕೆಂದು ಸೂಚಿಸಲಾಗಿದೆ.
4
+ ಡಿಸೆಂಬರ್ 4ರಂದು ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, ಅದಕ್ಕೂ ಮೊದಲೇ ಉಭಯ ಸದನಗಳಲ್ಲಿ ಪ್ರತಿಪಕ್ಷ ನಾಯಕರ ಆಯ್ಕೆ ಮಾಡಬೇಕಿದೆ. ಅದಕ್ಕಾಗಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ನೂತನ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಚೊಚ್ಚಲ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
5
+ ಶಾಸಕರ ಸಭೆಗೆ ದೆಹಲಿಯಿಂದ ಹೈಕಮಾಂಡ್ ಪ್ರತಿನಿಗಳಾಗಿ ಇಬ್ಬರು ನಾಯಕರು ವೀಕ್ಷಕರಾಗಿ ಆಗಮಿಸಲಿದ್ದಾರೆ. ಯಾವ ನಾಯಕರನ್ನು ಕಳುಹಿಸಲಿದ್ದಾರೆ ಎನ್ನುವ ಮಾಹಿತಿ ಇನ್ನು ರಾಜ್ಯ ಘಟಕಕ್ಕೆ ಬಂದಿಲ್ಲ. ಬಹುತೇಕ ರಾಜ್ಯ ರಾಜಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ಇರುವ ನಾಯಕರನ್ನೇ ಕಳುಹಿಸಿಕೊಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿದು ಬಂದಿದೆ.
6
+ ದೇಶ ತೊರೆಯಲು ಭಾರತೀಯ ಪಡೆಗಳಿಗೆ ಮಾಲ್ಡೀವ್ಸ್ ಸೂಚನೆ
7
+ ಹೈಕಮಾಂಡ್ ಸಂದೇಶ ಹೊತ್ತು ಬರುವ ವೀಕ್ಷಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಹೈಕಮಾಂಡ್ ಸೂಚನೆ ತಿಳಿಸಿ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ಮುಗಿಸಲಿದ್ದಾರೆ. ಸದನದಲ್ಲಿ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಸಮರ್ಥವಾಗಿ ಎದುರಿಸಬಲ್ಲ ವ್ಯಕ್ತಿಯನ್ನು ಆಯ್ಕೆ ಮಾಡಲಾಗುತ್ತದೆ. ಅದೇ ರೀತಿ ಪರಿಷತ್‍ನಲ್ಲೂ ಆಡಳಿತ ಪಕ್ಷವನ್ನು ಎದುರಿಸಬಲ್ಲ ವ್ಯಕ್ತಿಗೆ ಅವಕಾಶ ನೀಡಲಾಗುತ್ತದೆ.
8
+ ಇನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಶಾಸಕರನ್ನು ಉದ್ದೇಶಿಸಿ ಮೊದಲ ಭಾಷಣ ಮಾಡಲಿದ್ದಾರೆ. ಶಾಸಕರ ಸಹಕಾರ ಕೋರಲಿದ್ದಾರೆ. ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸುವ ಪೂರ್ವದಲ್ಲಿ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಮುಂದಿ�� ಹೆಜ್ಜೆ ಇರಿಸಲು ಶಾಸಕರ ಜೊತೆ ಮಾತುಕತೆ ನಡೆಸಿ, ಅವರ ಅಭಿಪ್ರಾಯ ಆಲಿಸಲಿದ್ದಾರೆ.
9
+ ನಂತರ ರಾಜ್ಯ ಪ್ರವಾಸ, ಕಾರ್ಯಕಾರಿ ಸಮಿತಿಯಲ್ಲಿ ಮಾರ್ಪಾಡು ಮಾಡುವ ಕುರಿತು ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಶುಕ್ರವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ಹೇಳಿದ್ದಾರೆ.
10
+ ತಮಿಳುನಾಡು, ಪುದುಚೇರಿಯಲ್ಲಿ ರಣಮಳೆ
11
+ ರೇಸ್‍ನಲ್ಲಿ ಯಾರೆಲ್ಲಾ ಇದ್ದಾರೆ?ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಭರ್ಜರಿ ಪೈಪೋಟಿಯೇ ಇದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕರಾದ ಡಾ. ಸಿ.ಎನ್.ಅಶ್ವತ್ಥ ನಾರಾಯಣ್, ಆರ್ ಅಶೋಕ್ ಮುಂಚೂಣಿಯಲ್ಲಿದ್ದಾರೆ. ಇತ್ತ ಶಾಸಕ ಸುನೀಲ್ ಕುಮಾರ್ ಹಿಂದುಳಿದ ವರ್ಗ ಪರವಾಗಿ ಪರಿಗಣಿಸಬೇಕು ಎನ್ನುತ್ತಾರೆ. ಉಳಿದಂತೆ ಇತರೆ ನಾಯಕರಲ್ಲಿಯೂ ಕೂಡ ಆಕಾಂಕ್ಷಿಗಳಿದ್ದು ಹೈಕಮಾಂಡ್ ತೀರ್ಮಾನ ಏನು ಎಂಬುದನ್ನು ಕಾದುನೋಡಬೇಕಿದೆ.
12
+ ಆದರೆ, ನಾಳೆ ಹೆಸರನ್ನು ಘೋಷಿಸುವ ಬಗ್ಗೆ ಸ್ಪಷ್ಟತೆ ಇಲ್ಲ. ವೀಕ್ಷಕರು ಇಲ್ಲಿ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ವಾಪಸಾದ ಬಳಿಕ ವರಿಷ್ಠರೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಇದೇ ವೇಳೆ ವಿಜಯೇಂದ್ರ ಅವರು ಮುಂದಿನ ವಾರ ದೆಹಲಿಗೆ ತೆರಳುವುದರಿಂದ ಅವರು ವಾಪಸಾದ ಬಳಿಕ ಅಂತಿಮಗೊಳ್ಳುವ ಸಂಭವವೂ ಇದೆ ಎನ್ನಲಾಗಿದೆ.
eesanje/url_46_312_9.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕಲೆಕ್ಷನ್ ಪ್ರಿನ್ಸ್ ಮಗ : ಹೆಚ್‌ಡಿಕೆ ಟೀಕೆ
2
+ ಬೆಂಗಳೂರು, ನ.16-ಕಾಸಿಗಾಗಿ ಹುದ್ದೆ ನೀಡಲಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ.ಡಿ.ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
3
+ ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮಿಂದ( ಮುಖ್ಯಮಂತ್ರಿ) ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ? ನೈತಿಕ ಮೌಲ್ಯಗಳಂತೂ ದುಪ್ಪಟ್ಟು ಜಾಸ್ತಿ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ. ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದ್ದಾರೆ.
4
+ ಕಾಸಿಗಾಗಿ ಹುದ್ದೆ ಉರುಫ್#CashForPostingದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ.@INCKarnatakaಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ…../T1366ek2iS
5
+ ಕಾಸಿಗಾಗಿ ಹುದ್ದೆ ಉರುಫ್ ಕ್ಯಾಶ್ ಫಾರ್ ಪೋಸ್ಟಿಂಗ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ ನಡೆದಿದೆ ಎನ್ನುವುದಕ್ಕೆ ವಿಡಿಯೋ ತುಣುಕೇ ಸಾಕ್ಷಿ. ರಾಜ್ಯ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಆರೋಪಿಸಿದ್ದಾರೆ.
6
+ ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ.
7
+ ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು? ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, ನಾನು ಹೇಳಿದವರಷ್ಟನ್ನೇ ಮಾಡಿ ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೊಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ ಒಳ ವಸೂಲಿ ಸಚಿವಾಲಯದ ಸಚಿವರಾ? ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
8
+ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 6 ತಿಂಗಳಿಗೊಬ್ಬ ಸಿಎಂ ಗ್ಯಾರಂಟಿ : ಕೆ.���ಿ.ರಾಮರಾವ್
9
+ ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ? ಎಂದು ಕೇಳಿದ್ದಾರೆ.
10
+ ಈಗ ಹೇಳಿ ಸಿದ್ದರಾಮಯ್ಯನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು? ಎಂದು ಆರೋಪಿಸಿದ್ದಾರೆ. ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ.
11
+ ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ ಸುಲಿಗೆಪುತ್ರ ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ. ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು ಎಂದಿದ್ದಾರೆ.
eesanje/url_46_313_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ
2
+ ಹಾಸನ, ನ.15- ಕಳೆದ 12 ದಿನಗಳಿಂದ ಭಕ್ತರಿಗೆ ದರ್ಶನ ನೀಡಿದ್ದ ನಗರದ ಅದೇವತೆ ಹಾಸನಾಂಬಾ ದೇವಾಲದ ಗರ್ಭಗುಡಿಯ ಬಾಗಿಲನ್ನು ಇಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ದರ್ಶನೋತ್ಸವಕ್ಕೆ ತೆರೆ ಎಳೆಯಲಾಯಿತು.
3
+ ನ.2ರಿಂದ ಆರಂಭವಾಗಿದ್ದ ಹಾಸನಾಂಬ ದರ್ಶನೋತ್ಸವಕ್ಕೆ ಇಂದು ತೆರೆ ಬಿದ್ದಿದ್ದು, ಮತ್ತೆ ದರ್ಶನಕ್ಕೆ ಒಂದು ವರ್ಷ ಕಾಯಬೇಕಾಗಿದೆ. ಈ ಬಾರಿ 13. 5 ಲಕ್ಷ ಭಕ್ತರು ದರ್ಶನ ಪಡೆದು ಪುನೀತರಾಗಿರುವುದು ದಾಖಲೆಯಾಗಿದೆ. ನಿನ್ನೆ ಬೆಳಗ್ಗೆ 6 ಗಂಟೆವರೆಗೂ ವಿಶೇಷ ದರ್ಶನ ಸಾವಿರ ರೂ. ಹಾಗೂ 300 ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 5,79,56,460 ರೂ. ಹಣ ಸಂಗ್ರಹವಾಗಿದ್ದು ದಾಖಲೆಯಾಗಿದೆ.
4
+ ಹೂವಿನ ಹಾಸಿಗೆಯಲ್ಲ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾದಿ
5
+ ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ದೇವಿಗೆ ಅಲಂಕಾರ ಮಾಡಲಾಗಿದ್ದ ಆಭರಣಗಳನ್ನು ತೆಗೆದು ಪೂಜೆ ಸಲ್ಲಿಸಿ ದೀಪ ಹಚ್ಚಿ ಹೂ ನೈವೇದ್ಯವಿಟ್ಟು ವಿವಿಧ ಗಣ್ಯರು ಅಕಾರಿಗಳ ಸಮ್ಮುಖದಲ್ಲಿ ವಿಶ್ವರೂಪ ದರ್ಶನದ ಬಳಿಕ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಯಿತು.
6
+ ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಈ ಬಾರಿ ರಾಜ್ಯದ ವಿವಿಧ ಮೂಲೆಗಳಿಂದ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಪ್ರಾರಂಭದಲ್ಲಿ ಕೆಲ ಗೊಂದಲಗಳಾಗಿದ್ದು, ನೂಕುನುಗ್ಗುಲು ಉಂಟಾಗಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಕೊನೆಗೆ ಜಿಲ್ಲಾಧಿಕಾರಿಗಳೇ ದೇವಾಲಯದ ಆವರಣದಲ್ಲಿ ನಿಂತು ಭಕ್ತರಿಗೆ ಮಾರ್ಗದರ್ಶನ ನೀಡುತ್ತ ದೇವಿಯ ಸುಗಮ ದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದರು.
7
+ ಹಾಸನಾಂಬೆ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ: 14.20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
8
+ ಹಾಸನಾಂಬ ದರ್ಶನಕ್ಕೆ ಇಂದು ವಿದ್ಯುಕ್ತ ತೆರೆ ಎಳೆಯಲಾಯಿತು. ಇಂದು ಮಧ್ಯಾಹ್ನ 12.30 ಗಂಟೆ ಸುಮಾರಿಗೆ ಗರ್ಭಗುಡಿ ಬಾಗಿಲನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಅಕಾರಿಗಳ ಸಮ್ಮುಖದಲ್ಲಿ ಮುಚ್ಚಲಾಯಿತು.ಹಾಸನಾಂಬಾ ಜಾತ್ರಾ ಮಹೋತ್ಸವದ ಕಡೇ ದಿನದ ಹಿನ್ನೆಲೆಯಲ್ಲಿ ಅರ್ಚಕರು ಗರ್ಭಗುಡಿ ಬಾಗಿಲು ಮುಚ್ಚುವ ಮುನ್ನ ದೇವರ ಮುಂದೆ ದೀಪ ಹಚ್ಚಿ, ಹೂವು, ನೈವೇದ್ಯ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ವರ್ಷ ಬಾಗಿಲು ತೆರೆಯುವವರೆಗೂ ಅರ್ಚಕರು ಇಟ್ಟ ಹೂವು ಬಾಡುವುದಿಲ್ಲ, ದೀಪ ಆರುವುದಿಲ್ಲ ಎಂಬ ಪ್ರತೀತಿ ಇದೆ.
9
+ ಗರ್ಭಗುಡಿ ಬಾಗಿಲನ್ನು ನ.2 ರಿಂದ 15ರ ವರೆಗೆ ತೆರೆದಿದ್ದು, 14 ದಿನಗಳಲ್ಲಿ 12 ದಿನ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇದುವರೆಗೆ ಸುಮಾರು 14.20 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ. 1000, 300ರೂ. ವಿಶೇಷ ಟಿಕೆಟï, ಲಾಡು ಮಾರಾಟದಿಂದ ದಾಖಲೆಯೆ 6 ಕೋಟಿಗೂ ಅಕ ಆದಾಯ ಬರಲಿದೆ ಎಂದು ಅಂದಾಜಿಸಲಾಗಿದ್ದು , ಹುಂಡಿ ಕಾಣಿಕೆಯಿಂದ ಹೆಚ್ಚು ಆದಾಯ ಬರುವ ���ಿರೀಕ್ಷೆ ಇದೆ.
10
+ ಧಾರ್ಮಿಕ ವಿ-ವಿಧಾನಗಳೊಂದಿಗೆ ಹಾಸನಾಂಬ ದೇವಿ ಬಾಗಿಲು ಹಾಕಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಹಾಸನಾಂಬೆ ದರ್ಶನೋತ್ಸವ ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಜಿಲ್ಲಾಡಳಿತ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಹಕಾರದಿಂದ ಯಶಸ್ವಿ ಕಂಡಿದೆ. 12 ದಿನಗಳ ಸಾರ್ವಜನಿಕ ದರ್ಶನದಲ್ಲಿ ಪ್ರತಿಯೊಬ್ಬ ಭಕ್ತರಿಗೂ ದರ್ಶನ ಪಡೆಯಲು ಉತ್ತಮ ರೀತಿಯ ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
11
+ ಮುಂದಿನ ಬಾರಿ 11 ದಿನ ಮಾತ್ರ ದರ್ಶನ:2014 ಅಕ್ಟೋಬರ್ 23 ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದೇವಿಯ ದೇವಾಲಯ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, 11 ದಿನ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುತ್ತದೆ.
eesanje/url_46_313_10.txt ADDED
@@ -0,0 +1,7 @@
 
 
 
 
 
 
 
 
1
+ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ, ಹೊತ್ತಿ ಉರಿದ ನಾಲ್ಕು ಅಂತಸ್ತಿನ ಕಟ್ಟಡ
2
+ ಬೆಂಗಳೂರು, ನ.13- ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಫರ್ನಿಚರ್ ಶೋರೂಂ ಸುಟ್ಟು ಕರಕಲಾಗಿರುವ ಘಟನೆ ಹೊರಮಾವು ಬಳಿಯ ಔಟರ್ ರಿಂಗ್ ರೋಡ್‍ನಲ್ಲಿ ತಡರಾತ್ರಿ ನಡೆದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೆಲ ಹಾಗೂ ಮೊದಲನೇ ಮಹಡಿಯಲ್ಲಿದ್ದ ಪಿಠೋಪಕರಣದ ಅಂಗಡಿಗೆ ಬೆಂಕಿಯ ಜ್ವಾಲೆ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಪಿಠೋಪಕರಣಗಳು ಹಾಗೂ ದಾಖಲೆಗಳು ಸುಟ್ಟು ಕರಕಲಾಗಿವೆ.
3
+ ಶಂಕರ್ ಎಂಬುವವರಿಗೆ ಸೇರಿದ್ದ ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಕೋಚಿಂಗ್ ಸೆಂಟರ್ ಹಾಗೂ 3 ಮತ್ತು 4ನೇ ಅಂತಸ್ತಿನಲ್ಲಿ ಐಟಿ ಕಂಪನಿ ಇದ್ದು, ಅಲ್ಲಿಗೂ ಸಹ ಬೆಂಕಿ ಆವರಿಸಿ ಅಲ್ಲಿದ್ದ ಪಿಠೋಪಕರಣಗಳು, ದಾಖಲೆಗಳು ಸುಟ್ಟು ಬೆಂಕಿಗಾಹುತಿಯಾಗಿದೆ.
4
+ ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ
5
+ ಕೂಡಲೇ ಎಚ್ಚೆತ್ತ ಸೆಕ್ಯೂರಿಟಿ ಗಾರ್ಡ್‍ಗಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಐದು ವಾಹನಗಳಲ್ಲಿ ಬಂದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಭದ್ರತಾ ಸಿಬ್ಬಂದಿಗಳನ್ನು ರಕ್ಷಿಸಿದ್ದಾರೆ. ಶೋರೂಂನಲ್ಲಿ ಮರದ ಪಿಠೋಪಕರಣಗಳು ಹೆಚ್ಚಾಗಿದ್ದರಿಂದ ಬೆಂಕಿಯ ಜ್ವಾಲೆ ಹೆಚ್ಚಾಗಿದ್ದು, ಉಳಿದ ಮೇಲಂತಸ್ತಿನ ಕಟ್ಟಡಗಳಿಗೂ ಬೆಂಕಿ ವ್ಯಾಪಿಸುವಷ್ಟರಲ್ಲಿ ಸಿಬ್ಬಂದಿಗಳು ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದು ಸಂಭವಿಸಬಹುದಾದ ಬಾರಿ ಅನಾಹುತವನ್ನು ತಪ್ಪಿಸಿದ್ದಾರೆ.
6
+ ಫರ್ನಿಚರ್ ಶೋರೂಂನಲ್ಲಿ ಶಾರ್ಕ್‍ಸಕ್ಯೂರ್ಟ್‍ನಿಂದಾಗಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ನಗರದ ವೀರಭದ್ರ ನಗರದಲ್ಲಿ ಬಸ್ ಗ್ಯಾರೇಜ್‍ನಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ 18 ಖಾಸಗಿ ಬಸ್‍ಗಳು ಸುಟ್ಟು ಕರಕಲಾಗಿದ್ದವು.
7
+ ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದ್ದು ಅದೃಷ್ಟ ವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಕಾನ್ ಸಿಟಿಯಲ್ಲಿ ಮೇಲಿಂದ ಮೇಲೆ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇದ್ದು, ಕಾರ್ಖಾನೆ, ಶೋರೂಂ, ಕಚೇರಿ, ಅಂಗಡಿ ಮಾಲೀಕರು ಎಚ್ಚರದಿಂದ ಇರಬೇಕಾಗುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಹೆಚ್ಚಿನ ಅನಾಹುತವನ್ನು ನಿಯಂತ್ರಿಸಬಹುದಾಗಿದೆಯೆಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮನವಿ ಮಾಡಿದ್ದಾರೆ.
eesanje/url_46_313_11.txt ADDED
@@ -0,0 +1,8 @@
 
 
 
 
 
 
 
 
 
1
+ ದೇವೇಗೌಡರು, ಎಸ್.ಎಂ.ಕೃಷ್ಣ ಹಾಗೂ ಬೊಮ್ಮಾಯಿ ಭೇಟಿ ಮಾಡಿದ ವಿಜಯೇಂದ್ರ
2
+ ಬೆಂಗಳೂರು,ನ.13-ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹಲವು ಪ್ರಮುಖ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಬಸವರಾಜ ಬೊಮ್ಮಾಯಿ ಅವರುಗಳನ್ನು ಭೇಟಿ ಮಾಡಿದರು.
3
+ ಮೊದಲು ಬೆಳಗ್ಗೆ ಆರ್.ಟಿ.ನಗರದಲ್ಲಿರುವ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿದ ವಿಜಯೇಂದ್ರ ಆರೋಗ್ಯದ ವಿಚಾರಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಬಂದ ಅವರನ್ನು ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡು ಕೆಲಕಾಲ ಉಭಯ ಕುಶಲೋಪರಿ ವಿಚಾರಿಸಿದರು. ಇತ್ತೀಚೆಗೆ ಬೊಮ್ಮಾಯಿ ಅವರು ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದರ ಜೊತೆಗೆ ಅಧ್ಯಕ್ಷರಾದ ಬಿವೈವಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
4
+ ಪಕ್ಷದ ಸಾರಥ್ಯ ವಹಿಸಿರುವ ತಮಗೆ ಎಲ್ಲ ರೀತಿಯಿಂದಲೂ ಮಾರ್ಗದರ್ಶನ, ಸಹಕಾರ ನೀಡವುದಾಗಿ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ. ಆರ್‍ಟಿನಗರದಿಂದ ನೇರವಾಗಿ ವಿಜಯೇಂದ್ರ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
5
+ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ಹಾಸನ ಲೋಕಸಭಾ ಸದಸ್ಯರಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ತಮ್ಮಣ್ಣ ಮತ್ತಿತರರು ಬರಮಾಡಿಕೊಂಡರು.
6
+ ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ
7
+ ವಿಜಯೇಂದ್ರ ಅವರಿಗೆ ದೇವೇಗೌಡರು ಶಾಲು ಹೊದಿಸಿ ಗಂಧದ ಹಾರ ತೊಡಿಸಿ ಶುಭ ಕೋರಿದರು. ನಂತರ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿಕೊಟ್ಟ ವಿಜಯೇಂದ್ರ, ಅವರಿಂದಲೂ ಆಶೀರ್ವಾದ ಪಡೆದುಕೊಂಡರು.
8
+ ಪಕ್ಷದ ಸಂಘಟನೆ ವಿಷಯದಲ್ಲಿ ತಮ್ಮನ್ನು ಯಾವಾಗಲಾದರೂ ಭೇಟಿ ಮಾಡಿದರೂ ಅಗತ್ಯ ಸಲಹೆ, ಮಾರ್ಗದರ್ಶನ ಮಾಡುವುದಾಗಿ ಎಸ್.ಎಂ.ಕೃಷ್ಣ ಅವರು ಆಶ್ವಾಸನೆ ನೀಡಿದ್ದಾರೆ. ಬಳಿಕ ಸಂಜೆ ವಿಜಯೇಂದ್ರ ಬಿಜೆಪಿ ಹಿರಿಯ ನಾಯಕ ಆರ್.ಅಶೋಕ್ ಅವರನ್ನು ಭೇಟಿ ಮಾಡಲಿದ್ದಾರೆ.
eesanje/url_46_313_12.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ
2
+ ಬೆಂಗಳೂರು, ನ.13- ದೀಪಾವಳಿಗೆ ನಿಗಮ ಮಂಡಳಿಗಳ ನೇಮಕಾತಿಯ ಉಡುಗೊರೆ ಸಿಗಲಿದೆ ಎಂದು ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಶೆಯಾಗಿದ್ದು, ಮತ್ತೆ ಹೊಸ ವರ್ಷದ ಬಂಪರ್ ಆಫರ್‍ನ ಆಸೆ ತೋರಿಸಲಾಗುತ್ತಿದೆ.ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದೆ, ಸಚಿವರು ದರ್ಬಾರ್ ನಡೆಸುತ್ತಿದ್ದಾರೆ. ಹಿರಿಯ ಶಾಸಕರು ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ.
3
+ ಕಿರಿಯ ಶಾಸಕರು ನಿಗಮ ಮಂಡಳಿಗಳಲ್ಲಿಯಾದರೂ ಅವಕಾಶ ಸಿಗಬಹುದು ಎಂದು ಕಾದು ಕುಳಿತಿದ್ದಾರೆ. ಅತ್ತ ಪಕ್ಷವನ್ನು ಅಧಿಕಾರಕ್ಕೆ ತರಲು ತನು, ಮನ, ಧನಪೂರ್ವಕವಾಗಿ ಯೋಧರಂತೆ ಶ್ರಮಿಸಿದ ಕಾರ್ಯಕರ್ತರು ಯಾರೇ ಅಧಿಕಾರದಲ್ಲಿದ್ದರೂ ನಮ್ಮ ಹಣೆಯ ಬರಹ ಇಷ್ಟೆ ಎಂದು ಸಿನಿಕತನಕ್ಕೆ ಜಾರಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಕಿರುಕೂಳಗಳಿಗೆ ಎದೆ ಕೊಟ್ಟು ಹೋರಾಟ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದಲ್ಲಿ ಅನಾಥ ಪ್ರಜ್ಞೆಯಿಂದ ನರಳುತ್ತಿದ್ದಾರೆ ಎಂಬ ಅಸಮಧಾನಗಳು ಕೇಳಿ ಬರುತ್ತಿವೆ.
4
+ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಕಾರ್ಯಕರ್ತರೇ ಮೊದಲು, ಅವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಪ್ರತಿ ಕಾರ್ಯಕ್ರಮದಲ್ಲೂ ಒತ್ತಿ ಹೇಳುತ್ತಿದ್ದಾರೆ. ಆದರೆ ಅವರ ಮಾತುಗಳು ಹೇಳಿಕೆಗಳಿಗಷ್ಟೆ ಸೀಮಿತವಾಗಿವೆ. ಮೂಗಿಗೆ ತುಪ್ಪ ಸವರಿ ಮಾಧ್ಯಮಗಳಲ್ಲಿ ದೊಡ್ಡ ದೊಡ್ಡದಾಗಿ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ. ಪಕ್ಷ ನಿಷ್ಠರಾದ ಡಿ.ಕೆ.ಶಿವಕುಮಾರ್ ಅವರ ಮಾತುಗಳನ್ನು ಕೇಳಿದರೆ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಾಳು ಬಂಗಾರವಾಯಿತು ಎಂದು ಖುಷಿ ಪಡಬೇಕು, ಆದರೆ ಆ ಖುಷಿ ಕಾರ್ಯಕರ್ತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂಬ ಅಸಹನೆಗಳು ಸಾಮಾನ್ಯವಾಗಿದೆ.
5
+ ಸಚಿವರಂತೂ ತಮ್ಮನ್ನು ತಾವು ರಾಜ ಮಹಾರಾಜರು ಎಂದುಕೊಂಡಿದ್ದಾರೆ. ಅವರ ಸುತ್ತಮುತ್ತಾ ಇರುವ ಸಿಬ್ಬಂದಿಗಳು, ಅಧಿಕಾರಿಗಳು, ಗನ್ ಮ್ಯಾನ್‍ಗಳದೇ ದರ್ಬಾರ್ ಆಗಿದೆ. ಒಂದಿಬ್ಬರು ಸಚಿವರನ್ನು ಹೊರತು ಪಡಿಸಿದರೆ ಉಳಿದೆಲ್ಲಾ ಮಂತ್ರಿಗಳ ಕಚೇರಿಗಳಲ್ಲಿ ಮಧ್ಯವರ್ತಿಗಳು, ಅಧಿಕಾರಿಗಳದೇ ದರ್ಬಾರ್ ಆಗಿದೆ.
6
+ ಸಾಮಾನ್ಯ ಕಾರ್ಯಕರ್ತರ ಪಾಡು ಹೇಳ ತೀರದಾಗಿದೆ. ಬ್ಲಾಕ್, ಜಿಲ್ಲಾಧ್ಯಕ್ಷರ ಮಾತಿಗೂ ಸಚಿವರ ಕಚೇರಿಗಳಲ್ಲಿ ಬೆಲೆ ಇಲ್ಲವಾಗಿದೆ. ವೈಯಕ್ತಿಕ ಕೆಲಸಗಳಿಗೆ ಅಗತ್ಯ ಬೆಲೆಯನ್ನು ಸಂದಾಯ ಮಾಡಲೇಬೇಕು, ಇನ್ನೂ ಕೆಲ ಸಚಿವರು ಸಾರ್ವಜನಿಕ ಸಮಸ್ಯೆಗಳು ಹಾಗೂ ಕೆಲಸಗಳಿಗೂ ಕೈ ಬಾಯಿ ನೋಡುತ್ತಿರುತ್ತಾರೆ. ಅಧಿಕಾರಿಗಳು ಬರಿಗೈನಲ್ಲೇ ಬರುತ್ತಿರಾ ಎಂದು ನೇರವಾಗಿ ಮಾತನಾಡುತ್ತಿದ್ದಾರೆ ಎಂಬ ಆಕ್ಷೇಪಗಳಿವೆ.
7
+ ಪ್ರತಿಯೊಬ್ಬ ಸಚಿವರ ಮನೆಯ ಮುಂದೆಯೂ ನೂರೈವತ್ತರಿಂದ 300 ಮಂದಿ ಮಂದಿ ಠಳಾಯಿಸಿರುತ್ತಾರೆ. ಅವರಲ್ಲಿ ಶೇ.50ರಷ್ಟು ಮಂದಿ ಮಧ್ಯವರ್ತಿಗಳಿದ್ದರೆ, ಶೇ.40ರಷ್ಟು ಅಧಿಕಾರಿಗಳು, ಉಳಿದ ಶೇ.10ರಷ್ಟು ಕಾರ್ಯಕರ್ತರು.
8
+ ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ
9
+ ಮಧ್ಯವರ್ತಿಗಳಲ್ಲಿ ಹಿಂದಿನ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದವರ ಪ್ರಮಾಣವೇ ಹೆಚ್ಚು ಕಾಣುತ್ತಿದೆ. ಠಾಕುಠೀಕಾಗಿ ಬಟ್ಟೆ ಧರಿಸಿ ತಿರುಗಾಡುವ ಪಿಆರ್ ಏಜೆನ್ಸಿಗಳ ಪ್ರತಿನಿಧಿಗಳು ಕಡ್ಡಾಯವಾಗಿ ಕಾಣಸಿಗುತ್ತಾರೆ. ಸಚಿವರ ಭೇಟಿಗೆ ಮೊದಲ ಆದತೆ ಲಾಭ ಮಾಡಿಕೊಡುವವರಿಗೆ ಸಿಗುತ್ತಿದೆ. ಸಮಯ ಉಳಿದರೆ ಕಾರ್ಯಕರ್ತರ ಮನವಿಗಳನ್ನು ಸಚಿವರು ಕಸಿದುಕೊಂಡು ಕಾರು ಏರುತ್ತಾರೆ ಎಂದು ಹೇಳಲಾಗುತ್ತಿದೆ.
10
+ 2013ರಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾಗಲೂ ನಿಗಮ ಮಂಡಳಿಗಳ ನೇಮಕಾತಿಗೆ ಒಂದುವರೆ ವರ್ಷ ತಡ ಮಾಡಲಾಗಿತ್ತು. ಪ್ರಸ್ತುತ ಸರ್ಕಾರದಲ್ಲೂ ಅದೇ ನಡೆಯಬಹುದೇನೋ ಎಂಬ ಅನುಮಾನ ಕಾರ್ಯಕರ್ತರನ್ನು ಕಾಡುತ್ತಿದೆ. ಆಡಳಿತ ವೆಚ್ಚ ತಗ್ಗಿಸುವ ನೆಪವೊಡ್ಡಿ ನೇಮಕಾತಿಯನ್ನು ಮುಂದೂಡಲಾಗುತ್ತಿದೆ. ಆದರೆ ಮತ್ತೊಂದೆಡೆ ಸಚಿವರು ಹೊಸ ಕಾರ್ ಖರೀದಿ, ಮನೆ, ಕಚೇರಿಗಳ ನವೀಕರಣಕ್ಕೆ ಕೋಟ್ಯಂತರ ರೂಪಾಯಿಗಳ ಖರ್ಚು ಮಾಡಲಾಗುತ್ತಿದೆ. ಸರ್ಕಾರಿ ಕಾರ್ಯಕ್ರಮಗಳ ಆಚರಣೆಯನ್ನು ಪಿಆರ್ ಕಂಪೆನಿಗಳಿಗೆ ವಹಿಸಿ ಒಂದಕ್ಕೆ ಐದು ಪಟ್ಟು ಬಿಲ್ ಏರಿಸಿ ವೆಚ್ಚ ಮಾಡಲಾಗುತ್ತಿದೆ.
11
+ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ನೀಡಲು ಆಡಳಿತಾತ್ಮಕ ವೆಚ್ಚ ಎಂದು ನೆಪ ಹೇಳುತ್ತಾರೆ ಎಂದು ಕಾರ್ಯಕರ್ತರರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈ ಬಾರಿಯೂ ಶಾಸಕರಿಗೆ ಆದ್ಯತೆ ನೀಡುವುದಾಗಿ ಹೇಳಲಾಗುತ್ತಿದೆ. ಹಾಗಿದ್ದರೆ ಕಾರ್ಯಕರ್ತರು ಮಾತ್ರ ದುಡಿಯಲಿಕ್ಕೆ ಮಾತ್ರ ಇರುವುದಾ ಎಂದು ಇತ್ತೀಚೆಗೆ ರಹಸ್ಯೆ ಸಭೆ ನಡೆಸಿದ ಕೆಲ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಹೀಗೆ ಆದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಗ್ಗರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ.
12
+ ಈ ಮೊದಲು ದೀಪಾವಳಿ ವೇಳೆಗೆ ನಿಗಮ ಮಂಡಳಿಗಳ ನೇಮಕಾತಿಯಾಗಲಿದೆ ಎಂದು ಹೇಳಲಾಗಿತ್ತು, ಅದು ಮುಂದೂಡಿಕೆಯಾಗಿದ್ದು ಹೊಸ ವರ್ಷಕ್ಕೆ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್‍ನ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಪಂಚರಾಜ್ಯಗಳ ಚುನಾವಣಾ ಉಸ್ತುವಾರಿಯಲ್ಲಿದ್ದು ಅವು ಮುಗಿದ ಬಳಿಕ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಡಿಸೆಂಬರ್ 4 ರಿಂದ ಬೆಳಗಾವಿ ಅಧಿವೇಶನ ನಡೆಯಲಿದೆ. ಅದು ಮುಗಿದ ಬಳಿಕ ನಿಗಮ ಮಂಡಳಿಗಳ ನೇಮಕಾತಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.
13
+ ಗಣೇಶ್ ಹಬ್ಬ, ದೀಪಾವಳಿ, ಹೊಸ ವರ್ಷ, ಸಂಕ್ರಾಂತಿ ಎಂದು ನಿರೀಕ್ಷಿಸುವುದೇ ನಮ್ಮ ಹಣೆಯ ಬರಹ ಎಂದು ಕಾರ್ಯಕರ್ತರು ಹಲಬುತ್ತಿದ್ದಾರೆ. ಸಂಕ್ರಾಂತಿ ಬಳಿ ಲೋಕಸಭೆ ಚುನಾವಣೆ ತಯಾರಿಗಳು ಎಂದು ನಾಯಕರು ಬ್ಯೂಸಿಯಾಗುತ್ತಾರೆ. ಅಲ್ಲಿಗ��� ಮತ್ತೆ ಒಂದು ವರ್ಷ ಕಾರ್ಯಕರ್ತರಿಗೆ ಅರ್ಧ ಚಂದ್ರ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ.
eesanje/url_46_313_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಹೂವಿನ ಹಾಸಿಗೆಯಲ್ಲ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾದಿ
2
+ ಬೆಂಗಳೂರು, ನ.15- ಹಲವರ ಅಪಸ್ವರದ ನಡುವೆಯೂ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದು ಅವರ ಪಾಲಿಗೆ ಹೂವಿನ ಹಾಸಿಗೆಯಲ್ಲ. ಬದಲಿಗೆ ಕೆಳ ಹೀನವಾಗಿರುವ ಪಕ್ಷಕ್ಕೆ ಹೊಸ ಹುರುಪು ನೀಡಿ, ಪಕ್ಷವನ್ನು ಮುನ್ನಡೆಸುವ ಹೊಣೆಗಾರಿಕೆ ಅವರ ಮೇಲಿದೆ.
3
+ ಇದೀಗ ರಾಜ್ಯಾಧ್ಯಕ್ಷ ಸ್ಥಾನ ಜವಾಬ್ದಾರಿ ವಹಿಸಿಕೊಂಡಿರುವ ವಿಜಯೇಂದ್ರ ಮುಂದೆ ಸಾಲು ಸಾಲು ಸವಾಲುಗಳು ಇವೆ. ಅದರಲ್ಲೂ, ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪಕ್ಷ ಸಂಘಟನೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ರೂಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಲವು ಅಸ್ತ್ರಗಳೂ ಮುಂದಿದೆ.
4
+ ಜಾತಿ ಗಣತಿ ಬಿಜೆಪಿಯ ಮುಂದೆ ಇರುವ ಪ್ರಮುಖ ಅಸ್ತ್ರ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ. ಶಾಶ್ವತ ಹಿಂದುಳಿದ ಆಯೋಗ ಶೀಘ್ರದಲ್ಲಿ ವರದಿ ಸಲ್ಲಿಸುವುದಾಗಿ ತಿಳಿಸಿದೆ. ಆದರೆ ಇದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ.
5
+ ಮಹಾರಾಷ್ಟ್ರ : ಮರಾಠ ಮೀಸಲಾತಿ ಹೋರಾಟಕ್ಕೆ ಮೊದಲ ಬಲಿ
6
+ ಅದರಲ್ಲೂ ಲಿಂಗಾಯತ ಸಮುದಾಯ ಜಾತಿಗಣತಿ ವರದಿಗೆ ವಿರೋಧ ವ್ಯಕ್ತಪಡಿಸಿದೆ. ಈ ನಿಟ್ಟಿನಲ್ಲಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪುಸುವಲ್ಲಿ ವಿಜಯೇಂದ್ರಗೆ ಅವಕಾಶ ಇದೆ. ಜಾತಿಗಣತಿ ವೈಜ್ಞಾನಿಕವಾಗಿಲ್ಲ ಎಂದು ಅಭಿಪ್ರಾಯ ರೂಪಿಸುವ ಮೂಲಕ ಹೋರಾಟ ರೂಪಿಸಲು ಅವಕಾಶ ಇದೆ.
7
+ ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿದೆ. ವರ್ಗಾವಣೆ ದಂಧೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆರೋಪಗಳನ್ನು ಮಾಡುತ್ತಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆರೋಪಗಳು ಕೇಳಿಬಂದಿದೆ. ಈ ವಿಚಾರವಾಗಿ ಬಿಜೆಪಿಗಿಂತ ಹೆಚ್ಚಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ಆದರೆ ಬಿಜೆಪಿ ಸೈಲೆಂಟಾಗಿತ್ತು. ಇದೀಗ ವಿಜಯೇಂದ್ರ ಅವರಿಗೆ ಈ ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ರೂಪಿಸಲು ಅವಕಾಶ ಇದೆ.
8
+ ಐದು ಗ್ಯಾರಂಟಿ ಘೋಷಣೆ ಮಾಡುವ ಮೂಲಕ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಲಾಭವನ್ನು ಪಡೆದುಕೊಂಡಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಜಾರಿ ಮಾಡಿರುವುದನ್ನು ಮುಂದಿಟ್ಟುಕೊಂಡು ವರ್ಚಸ್ಸು ಹೆಚ್ಚಿಸುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ. ಆದರೆ ಗ್ಯಾರಂಟಿ ಜಾರಿಯಲ್ಲಿ ಹಲವು ಎಡವಟ್ಟುಗಳು ಮಾಡಿದೆ. ಗೃಹಲಕ್ಷ್ಮೀ ಯೋಜನೆ ಜಾರಿಯಲ್ಲಿ ಸಮಸ್ಯೆಗಳು ಎದುರಾಗುತ್ತಿದೆ. ಇದನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಿಜಯೇಂದ್ರ ಹೋರಾಟದವನ್ನು ರೂಪಿಸಲು ಅವಕಾಶ ಇದೆ.
9
+ ರಾಜ್ಯದಲ್��ಿ ಕೇವಲ ಗ್ಯಾರಂಟಿ ಯೋಜನೆಗಳ ಜಾರಿಗೆ ಆದ್ಯತೆ ನೀಡಲಾಗುತ್ತಿದೆ. ಆದರೆ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂಬ ಆರೋಪ ಇದೆ. ಸರ್ಕಾರ ಅಕಾರಕ್ಕೆ ಬಂದು ಆರು ತಿಂಗಳಾದರೂ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಇಲಾಖಾವಾರು ಕೆಲಸಗಳು ನಡೆದಿಲ್ಲ ಎಂಬ ಆರೋಪಗಳು ಇವೆ.
10
+ ಈ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ವಿಜಯೇಂದ್ರ ಮುಂದಾಗುತ್ತಾರಾ ಎಂಬುದು ಕೂಡ ಪ್ರಶ್ನೆಯಾಗಿದೆ. ಒಟ್ಟಿನಲ್ಲಿ ಸಾಕಷ್ಟು ಅಸ್ತ್ರಗಳು ವಿಜಯೇಂದ್ರ ಮುಂದಿದೆ. ವಿರೋಧ ಪಕ್ಷವಾದ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಸರ್ಕಾರದ ವಿರುದ್ಧ ಹೇಗೆ ಹೋರಾಟ ರೂಪಿಸಿ ಜನಾಭಿಪ್ರಾಯ ರೂಪಿಸುತ್ತಾರೆ ಎಂಬುದನ್ನು ಕಾದುನೊಡಬೇಕಿದೆ.
eesanje/url_46_313_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾರ್ಯಕರ್ತರ ಹರ್ಷೋದ್ಘಾರಗಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ
2
+ ಬೆಂಗಳೂರು,ನ.15- ಕಳೆಗುಂದಿದ್ದ ಪಕ್ಷಕ್ಕೆ ಹೊಸ ಚೈತನ್ಯ ನೀಡುವ ದೃಢಸಂಕಲ್ಪ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸುವ ಪ್ರತಿಜ್ಞೆಯೊಂದಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು.
3
+ ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿಂದು ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ಪದಗ್ರಹಣ ಮಾಡಿದರು.ನಿರ್ಗಮಿತ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಪಕ್ಷದ ಬಾವುಟ ನೀಡಿ ವಿದ್ಯುಕ್ತವಾಗಿ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.
4
+ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅಕಾರ ಸ್ವೀಕಾರ ಮಾಡಿದ್ದು, ರಾಜ್ಯದಲ್ಲಿ ಇಂದಿನಿಂದ ವಿಜಯೇಂದ್ರ ಪರ್ವ ಆರಂಭವಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಪುಟಿದೇಳಲು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಲ್ಪಿಸಿದೆ.
5
+ ರಶ್ಮಿಕಾ ಮಂದಣ್ಣ ಡೀಪ್‍ಫೇಕ್ ಪ್ರಕರಣದಲ್ಲಿ ಬಿಹಾರದ ಯುವಕನ ವಿಚಾರಣೆ
6
+ ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಬಲ ಸಮುದಾಯ ವೀರಶೈವ ಲಿಂಗಾಯುತ ಸಮುದಾಯ ಹಿಂದೆ ಸರಿದಿದ್ದರಿಂದ ಪಕ್ಷಕ್ಕೆ ಹೀನಾಯ ಸೋಲುನ್ನುಂಟಾಗಿತ್ತು. ಮತ್ತೆ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಣೆ ಹಾಕಿತ್ತು. ಹಲವು ಹಿರಿಯ ನಾಯಕರ ಅಸಮಾಧಾನದೊಂದಿಗೆ ಇದೀಗ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿ ಅಕಾರ ಸ್ವೀಕರಿಸಿದ್ದು, 2024ರ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮಹತ್ವದ ಹೊಣೆಗಾರಿಕೆ ಬಿ.ವೈ.ವಿ ಅವರ ಮೇಲಿದೆ.
7
+ ಮುಖಂಡರಾದ ವಿ. ಸೋಮಣ್ಣ, ಸಿ.ಟಿ. ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಬಹಿರಂಗವಾಗಿ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿಲ್ಲವಾದರೂ ಆಂತರಿಕವಾಗಿ ಅಸಮಾಧಾನಗೊಂಡಿದ್ದು, ಮುಂದಿನ ದಿನಗಳಲ್ಲಿ ಸಹಕಾರ ನೀಡಲಿದ್ದಾರೆಯೇ ಎಂಬುವುದು ಯಕ್ಷಪಪ್ರಶ್ನೆಯಾಗಿದೆ.
8
+ ಇಂದು ಬೆಳಿಗ್ಗೆ ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಪಕ್ಷದ ಕಚೇರಿಗೆ ವಿಜಯೇಂದ್ರ ಅವರು ಆಗಮಿಸಿದರು.ಈ ವೇಳೆ ಹಿರಿಯ ನಾಯಕರು, ಕಾರ್ಯಕರ್ತರು ಹೂಗುಚ್ಛ ನೀಡಿ ಅಭಿನಂದನೆಗಳ ಸುರಿಮಳೆ ಗೈದರು.
9
+ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬಿ.ವೈ. ರಾಘವೇಂದ್ರ, ಜಿಎಸ್ ಬಸವರಾಜ್, ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಆರ್. ಆಶೋಕ್, ಈಶ್ವರಪ್ಪ , ಕಾರಜೋಳ ಸೇರಿದಂತೆ ಹಾಲಿ ಶಾಸಕರು, ನಾಯಕರು, ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.
eesanje/url_46_313_4.txt ADDED
@@ -0,0 +1,6 @@
 
 
 
 
 
 
 
1
+ ಅಕ್ರಮವಾಗಿ ವಿದ್ಯುತ್ ಸಂಪರ್ಕ : ಅಚಾತುರ್ಯಕ್ಕೆ ವಿಷಾದವಿದೆ, ದಂಡ ಕಟ್ಟುವೆ ಎಂದ ಕುಮಾರಸ್ವಾಮಿ
2
+
3
+ ಬೆಂಗಳೂರು, ನ.15-ದೀಪಾವಳಿ ಹಬ್ಬದ ನಿಮಿತ್ತ ಜೆ.ಪಿ.ನಗರದ ತಮ್ಮ ನಿವಾಸಕ್ಕೆ ವಿದ್ಯುತ್ ದೀಪಗಳ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕೊಡಲಾಗಿದೆ ಎಂಬ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
4
+ ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
5
+ ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ…
6
+ ಸೋಮವಾರ ನಾನು ಬಿಡದಿಯ ತೋಟದಲ್ಲಿದ್ದೆ. ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
eesanje/url_46_313_5.txt ADDED
@@ -0,0 +1,4 @@
 
 
 
 
 
1
+ ಕರ್ನಾಟಕ ಕರ-ಕುಶಲ ವಸ್ತುಗಳ ಪ್ರದರ್ಶನಕ್ಕೆ ದೆಹಲಿಯಲ್ಲಿ ಶಾಪಿಂಗ್ ಕಟ್ಟಡ ಸಂಕೀರ್ಣ
2
+ ನವದೆಹಲಿ, ನ.15-ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಭಾರತ ಅಂತರಾಷ್ಟ್ರೀಯ ವ್ಯಾಪಾರ ಮೇಳ 2023ರ ಅಂಗವಾಗಿ ಇಲ್ಲಿನ ಪ್ರಗತಿ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಕರ್ನಾಟಕ ಪೆವಿಲಿಯನ್ ಮಾದರಿಯಲ್ಲಿ ದೆಹಲಿಯಲ್ಲಿ ಶಾಶ್ವತವಾಗಿ 50 ಮಳಿಗೆಗಳನ್ನು ಒಳಗೊಂಡ ಒಂದು ಶಾಪಿಂಗ್ ಕಟ್ಟಡ ಸಂಕೀರ್ಣವನ್ನು ಆದಷ್ಟು ಬೇಗ ನಿರ್ಮಾಣ ಮಾಡುವುದಾಗಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಪ್ರಕಟಿಸಿದ್ದಾರೆ.
3
+ ಪ್ರಗತಿ ಮೈದಾನದಲ್ಲಿ ಆಯೋಜಿಸಿದ್ದ ಭಾರತ ಅಂತರಾಷ್ಟ್ರೀಯ ವ್ಯಾಪಾರ ಮೇಳ 2023ರಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಕರ -ಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ದೆಹಲಿಯಲ್ಲಿ 50 ಮಳಿಗೆಗಳನ್ನು ಶಾಶ್ವತವಾಗಿ ನಿರ್ಮಾಣ ಮಾಡಲಾಗುವುದು. ಇದರಿಂದ ಕರ್ನಾಟಕದ ಗುಡಿ ಕೈಗಾರಿಕೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದರು.
4
+ ಕರ್ನಾಟಕ ಪೆವಿಲಿಯನ್ ನಲ್ಲಿದ್ದ 40ಕ್ಕೂ ಹೆಚ್ಚು ಮಳೆಗೆಗಳನ್ನು ಜಯಚಂದ್ರ ಅವರು ವೀಕ್ಷಿಸಿದರು. ರಾಜ್ಯದ 31 ಜಿಲ್ಲೆಗಳಿಂದ ಆಗಮಿಸಿದ್ದ ಗ್ರಾಮೀಣ ಗುಡಿ ಕೈಗಾರಿಕೆ ವಸ್ತುಗಳು, ಚನ್ನಪಟ್ಟಣದ ಗೊಂಬೆಗಳು, ಕೆಎಸ್‍ಐಸಿ ಮೈಸೂರು ರೇಷ್ಮೆ ಸೀರೆಗಳು, ಸಿರಿಧಾನ್ಯಗಳು, ಮರದಿಂದ ಮಾಡಿದ್ದ ಅಲಂಕಾರಿಕ ವಸ್ತುಗಳು, ತೆಂಗು ಮತ್ತು ನಾರು ಅಭಿವೃದ್ಧಿ ಮಂಡಳಿ ತಯಾರಿಸಿದ್ದ ಉತ್ಪನ್ನಗಳು, ಚರ್ಮದ ಉತ್ಪನ್ನಗಳು, ಆಯುರ್ವೇದ ಔಷಗಳು, ವಿವಿಧ ಬಗೆಯ ತಿಂಡಿ-ತಿನಿಸುಗಳು ಸೇರಿದಂತೆ ಕರ್ನಾಟಕದಲ್ಲಿ ತಯಾರಿಸಿದ್ದ ವಿವಿಧ ಉತ್ಪನ್ನಗಳನ್ನು ವೀಕ್ಷಿಸಿ ಮಾರಟಗಾರರಿಗೆ ಪ್ರೋತ್ಸಾಹ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಭವನ ನಿವಾಸಿ ಆಯುಕ್ತರಾದ ಎಂ.ಇಮ್. ಕೊಂಗ್ಲ ಜಮೀರ್ ಹಾಜರಿದ್ದರು.
eesanje/url_46_313_6.txt ADDED
@@ -0,0 +1,8 @@
 
 
 
 
 
 
 
 
 
1
+ ಬೆಳಗಾವಿ ಅಧಿವೇಶನದಲ್ಲಿ ಜಾತಿಜನಗಣತಿ ವರದಿ ಮಂಡನೆ : ಸತೀಶ್ ಜಾರಕಿಹೊಳಿ
2
+ ಬೆಳಗಾವಿ,ನ.13- ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಮೀಕ್ಷಾ ವರದಿ ಡಿ.15ಕ್ಕೆ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆಗಳು ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜು ಅಧ್ಯಕ್ಷತೆಯ ಆಯೋಗದ ವರದಿಯ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. ಮೊದಲು ಅದು ಸರ್ಕಾರಕ್ಕೆ ಸಲ್ಲಿಕೆಯಾಗಬೇಕು. ಅದರಲ್ಲಿರುವ ಶಬ್ದಗಳೇನು, ಅಂಕಿಸಂಖ್ಯೆಗಳೇನು ಎಂಬ ಬಗ್ಗೆ ಸಾರ್ವಜನಿಕವಾಗಿ ಸದನದಲ್ಲಿ ಚರ್ಚೆಯಾಗಬೇಕು. ಎಲ್ಲರು ಒಪ್ಪಿದರೆ ವರದಿ ಅಂಗೀಕಾರವಾಗುತ್ತದೆ. ಇಲ್ಲವಾದರೆ ತಿರಸ್ಕಾರಗೊಳ್ಳಲಿದೆ. ಎಲ್ಲದಕ್ಕಿಂತ ಮೊದಲು ಅದರ ಬಗ್ಗೆ ಚರ್ಚೆ ಅಗತ್ಯ ಎಂದರು.
4
+ ಬೆಳಗಾವಿ ಅಧಿವೇಶನದಲ್ಲಿ ವರದಿ ಮಂಡನೆಯಾಗುವ ಸಾಧ್ಯತೆಗಳು ತೀವ್ರ ಕಡಿಮೆಯಿದೆ. ಡಿ.15ಕ್ಕೆ ವರದಿ ಸಲ್ಲಿಕೆಯಾಗಬಹುದು ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಎಂದು ಸಚಿವರಿಗೆ ಈವರೆಗೂ ಹೈಕಮಾಂಡ್ ಸೂಚನೆ ಮಾಡಿಲ್ಲ. ಹಾಗಾಗಿ ಸಚಿವರ ಸ್ಪರ್ಧೆ ಇಲ್ಲ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಆಸಕ್ತರಿಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಮೊದಲು ಅರ್ಜಿ ಸಲ್ಲಿಕೆಯಾಗಬೇಕು. ಆನಂತರ ನಿಗದಿತ ಮಾನದಂಡಗಳನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
5
+ ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ
6
+ ಆಕಾಂಕ್ಷಿಗಳು ಸಮುದಾಯದಲ್ಲಿ ಜನಪ್ರಿಯತೆ ಹೊಂದಿರಬೇಕು, ಪಕ್ಷನಿಷ್ಠರಾಗಿರಬೇಕು, ಹೈಕಮಾಂಡ್ ಪರಿಗಣಿಸಬೇಕು. ಅಂಥವರನ್ನು ಆಯ್ಕೆ ಮಾಡಲಾಗುತ್ತದೆ. ಬೆಳಗಾವಿ ಲೋಕಸಭೆಗೆ ಲಿಂಗಾಯಿತ ಸಮುದಾಯದ ಬಗ್ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮುದಾಯದಲ್ಲಿ ಟಿಕೆಟ್‍ನೀಡುವ ಚರ್ಚೆಗಳಾಗಿವೆ. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುಟುಂಬ ಈವರೆಗೂ ಟಿಕೆಟ್ ಕೇಳಿಲಿಲ್ಲ ಎಂದು ಸ್ಪಷ್ಟಪಡಿಸಿದರು. ನಿಗಮಮಂಡಳಿ ನೇಮಕಾತಿಗೆ ಪಂಚರಾಜ್ಯಗಳ ಚುನಾವಣೆ ಮತ್ತು ವಿಧಾನಮಂಡಲದ ಅಧಿವೇಶನದ ಬಳಿಕ ಪ್ರಕ್ರಿಯೆ ನಡೆಯಲಿದೆ ಎಂದರು.
7
+ ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಾವು ಎಲ್ಲಿಯೂ ಹೇಳಿಕೆ ನೀಡಿಲ್ಲ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಮುಖ್ಯಮಂತ್ರಿಯಾಗುವ ಬಗ್ಗೆ ಯಾವುದೇ ಆತುರವಿಲ್ಲ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಬೇಕು. ಆ ವೇಳೆ ಹೈಕಮಾಂಡ್ ನಾಯಕತ್ವವನ್ನು ಗುರುತಿಸಿದಾಗ ಮಾತ್ರ ತಾವು ಪ್ರಯತ್ನಿಸುವುದಾಗಿ ಹೇಳಿದರು.
8
+ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದೇವೆ. ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹೊರಲು ತಾವು ಸದ್ಯಕ್ಕೆ ತಯಾರಿಲ್ಲ ಎಂದು ಸ್ಪಷ್ಟಪಡಿಸಿದರು.
eesanje/url_46_313_7.txt ADDED
@@ -0,0 +1,7 @@
 
 
 
 
 
 
 
 
1
+ ಕಟ್ಟೆಚ್ಚರದ ನಡವೆಯೂ ಸಿಕ್ಕಾಪಟ್ಟೆ ಸದ್ದುಮಾಡಿದ ರಾಸಾಯನಿಕ ಪಟಾಕಿಗಳು
2
+ ಬೆಂಗಳೂರು,ನ.13- ರಾಜ್ಯ ಸರ್ಕಾರ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಟ್ಟೆಚ್ಚರದ ಹೊರತಾಗಿಯೂ ನಿನ್ನೆ ಮತ್ತೆ ರಾಸಾಯನಿಕ ಪಟಾಕಿಗಳೇ ಅಬ್ಬರಿಸಿವೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅ.17ರಂದು ಸುತ್ತೋಲೆ ಹೊರಡಿಸಿ ಪಟಾಕಿಗಳ ಬಳಕೆ ಬಗ್ಗೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಿತ್ತು.
3
+ ಸುಪ್ರೀಂಕೋರ್ಟ್ 2018ರಲ್ಲಿ ನೀಡಿದ್ದ ನಿರ್ದೇಶನಗಳ ಪ್ರಕಾರ ಶಬ್ದ ಹಾಗೂ ವಾಯುಮಾಲಿನ್ಯಕ್ಕೆ ಕಾರಣವಾಗುವ ಪಟಾಕಿಗಳನ್ನು ಬಳಸಲು ಅವಕಾಶ ಇಲ್ಲ. ಜೊತೆಗೆ ರಾತ್ರಿ 8ರಿಂದ 10 ಗಂಟೆವರೆಗೂ ಮಾತ್ರ ಹಸಿರು ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳು, ಎಸ್ಪಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಕಾರಿಗಳನ್ನೊಳಗೊಂಡ ವಿಶೇಷ ಕಾರ್ಯಪಡೆಗಳನ್ನು ರಚಿಸಿತ್ತು. ಈ ಕಾರ್ಯಪಡೆಗಳು ರಾಜ್ಯಾದ್ಯಂತ ಪರಿಶೀಲನೆ ನಡೆಸಿ ಪರಿಸರಕ್ಕೆ ಹಾನಿ ಮಾಡುವ ಪಟಾಕಿಗಳ ಸಂಗ್ರಹವನ್ನು ತಡೆಯಲು ಯತ್ನಿಸಿದರು.
4
+ ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ
5
+ ಹಸಿರು ಪಟಾಕಿಗಳ ಪತ್ತೆಹಚ್ಚುವಿಕೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಆದರೆ ಈ ಎಲ್ಲ ಪ್ರಯತ್ನಗಳು ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಅಧಿಕಾರಿಗಳ ಕಠಿಣ ನಿಯಮಾವಳಿಗಳು ಎಂದಿನಂತೆ ಜನಸಾಮಾನ್ಯರಿಗೆ ಬರೆ ಎಳೆದಿದೆ. ಸರ್ಕಾರದ ನಿಯಮಗಳನ್ನು ಮುಂದಿಟ್ಟುಕೊಂಡು ಮಾರಾಟಗಾರರು ಪಟಾಕಿಯ ದರಗಳನ್ನು ಏರಿಕೆ ಮಾಡಿಕೊಂಡಿದ್ದಾರೆ. ಹಸಿರು ಪಟಾಕಿಗಳು ದುಬಾರಿ ಯಾಗಿರುವುದರಿಂದ ಮತ್ತು ಅವುಗಳು ದೀಪಾವಳಿಯ ಅಬ್ಬರಕ್ಕೆ ಪೂರಕವಾಗಿ ಇಲ್ಲದಿರುವುದರಿಂದ ಸಾರ್ವಜನಿಕರು ಮತ್ತೆ ರಾಸಾಯನಿಕ ಮಿಶ್ರಿತ ಪಟಾಕಿಗಳ ಮೊರೆ ಹೋಗಿದ್ದಾರೆ.
6
+ ನಿನ್ನೆ ತಡರಾತ್ರಿಯವರೆಗೂ ಪಟಾಕಿಗಳ ಅಬ್ಬರಿಸಿವೆ. ವಾಯು ಮಾಲಿನ್ಯ ಉಸಿರುಗಟ್ಟಿಸುವಂತಾಗಿತ್ತು. ಹಸಿರು ಪಟಾಕಿಗಳ ಬಳಕೆ ಕ್ಷೀಣವಾಗಿತ್ತು. ಇಂದು ಮತ್ತು ನಾಳೆ ದೀಪಾವಳಿಯ ಸಂಭ್ರಮ ಬಾಕಿಯಿದ್ದು, ಪಟಾಕಿಗಳ ಅಬ್ಬರ ಖಾಯಂ ಎಂಬಂತಾಗಿದೆ.
7
+ ಈ ಹಿಂದೆ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ಬಿದ್ದು ದುರಂತ ಸಂಭವಿಸಿದ್ದರಿಂದಾಗಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಆ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ನಿಯಮಾವಳಿಗಳನ್ನು ಬಿಗಿಗೊಳಿಸಿತ್ತು. ಆದರೆ ಅದು ನಿರೀಕ್ಷಿತ ಪರಿಣಾಮ ಬೀರಿಲ್ಲ. ಭಾವನಾತ್ಮಕ ವಿಷಯಗಳಾಗಿರುವುದರಿಂದ ಅಧಿಕಾರಿಗಳು ಕೂಡ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹಿಂದೇಟು ಹಾಕುತ್ತಿದ್ದಾರೆ. ಸಾರ್ವಜನಿಕರು ಪರಿಸರ ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳದೆ ದೀಪಾವಳಿಯ ಸಂಭ್ರಮದಲ್ಲಿ ಮುಳುಗಿದ್ದಾರೆ.
eesanje/url_46_313_8.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಚಳಿ ಬಿಡಿಸಲು ಪ್ರತಿಪಕ್ಷ ಸಜ್ಜು
2
+ ಬೆಂಗಳೂರು, ನ.13-ಡಿಸೆಂಬರ್‌ನಲ್ಲಿ ನಡೆಯಲಿರುವ ಬೆಳಗಾವಿ ಅಧಿವೇಶನಕ್ಕೆ ಒಂದೆಡೆ ಸಿದ್ಧತೆ ನಡೆಯುತ್ತಿದ್ದರೆ, ಮತ್ತೊಂದೆಡೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ತಯಾರಾಗುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಹೊರತುಪಡಿಸಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳತ್ತಿಲ್ಲ ಎಂಬ ಆರೋಪವನ್ನು ಪ್ರತಿಪಕ್ಷಗಳು ಮಾಡುತ್ತಿವೆ.
3
+ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್‌ನಲ್ಲಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಧಿವೇಶನದ ಪೂರ್ವ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿವೆ. ರಾಜ್ಯದಲ್ಲಿ ತೀವ್ರವಾಗಿರುವ ಬರಪೀಡಿತ ಪ್ರದೇಶಗಳಲ್ಲಿ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪ್ರವಾಸ ಕೈಗೊಂಡಿವೆ.
4
+ ಪ್ರವಾಸದ ಸಂದರ್ಭದಲ್ಲಿ ವಾಸ್ತವ ಪರಿಸ್ಥಿತಿಯ ಮಾಹಿತಿಯನ್ನು ಕಲೆ ಹಾಕುತ್ತಿವೆ. ಚಳಿಗಾಲದ ಅಧಿವೇಶನದಲ್ಲಿ ಬರಪರಿಸ್ಥಿತಿ ನಿರ್ವಹಣೆಯನ್ನೇ ಪ್ರಮುಖ ಅಸ್ತ್ರವಾಗಿ ವಿರೋಧ ಪಕ್ಷಗಳು ಬಳಸಲಿವೆ. ಜೆಡಿಎಸ್ ಎನ್‍ಡಿಎ ಮೈತ್ರಿಕೂಟ ಸೇರಿರುವುದರಿಂದ ಬಿಜೆಪಿ ಜತೆಗೂಡಿ ಅಧಿವೇಶನದಲ್ಲಿ ಹೋರಾಟ ನಡೆಸಲಿದೆ. ಬಿಜೆಪಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರು ಬದಲಾಗಿದ್ದಾರೆ. ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರು ಹಾಲಿ ಶಾಸಕರೇ ಆಗಿದ್ದಾರೆ. ಹೀಗಾಗಿ ಉಭಯ ಪಕ್ಷಗಳು ಜಂಟಿಯಾಗಿ ಸರ್ಕಾರದ ವಿರುದ್ಧ ಸದನದಲ್ಲಿ ವಾಗ್ದಾಳಿ ನಡೆಸುವ ಸಾಧ್ಯತೆಯೇ ಹೆಚ್ಚಾಗಿದೆ.
5
+ ಮಳೆ ಕೊರತೆಯಿಂದ ತೀವ್ರ ಸ್ವರೂಪದ ಬರವಿದ್ದರೂ ಬೆಳೆಹಾನಿಯಾದ ರೈತರಿಗೆ ಬೆಳೆ ಪರಿಹಾರ ನೀಡಿಲ್ಲ. ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಸಿ ರಾಜ್ಯ ಸರ್ಕಾರ ಕಾಯುತ್ತಾ ಕುಳಿತಿದೆ ಎಂದು ಈಗಾಗಲೇ ಆರೋಪಿಸಿವೆ. ಸಮರ್ಪಕ ಕುಡಿಯುವ ನೀರು ಪೂರೈಕೆ, ಜನರು ಗುಳೆ ಹೋಗದಂತೆ ಉದ್ಯೋಗ, ಬೆಳೆ ಹಾನಿಗೆ ಪರಿಹಾರ, ಜಾನುವಾರುಗಳಿಗೆ ಅಗತ್ಯ ಮೇವು ಒದಗಿಸಬೇಕು ಎಂಬ ಆಗ್ರಹವನ್ನು ಪ್ರತಿಪಕ್ಷಗಳು ಮಾಡುತ್ತಿವೆ.
6
+ ವಿದ್ಯುತ್ ಅಭಾವದಿಂದ ರೈತರು ಹಾಗೂ ಜನರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆ ಮೇಲೆ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗುತ್ತಿವೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿ ಭರವಸೆಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಅನುಷ್ಠಾನದಲ್ಲಿನ ಲೋಪ-ದೋಷಗಳನ್ನು ಮುಂದಿಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಗಳಿವೆ.
7
+ ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ
8
+ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಬೆಳೆ ಪರಿಹಾರ, ವಿದ್ಯುತ್ ಸಮಸ್ಯೆ, ಕುಡಿಯುವ ನೀರು, ಬೆಲೆ ಏರಿಕೆ ಸೇರಿದಂತೆ ನಾಡಿನ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಪ್ರತಪಕ್ಷಗಳು ಪ್ರಮುಖ ಅಸ್ತ್ರವಾಗಿ ಬಳಸಲು ತಯಾರಿ ನಡೆಸುತ್ತಿವೆ. ಸಚಿವರು ಕೂಡ ಈಗಾಗಲೇ ಬರಪೀಡ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ವಾಸ್ತವ ಸ್ಥಿತಿಗತಿಯ ಮಾಹಿತಿ ಪಡೆದಿದ್ದಾರೆ.
9
+ ಬೀಕರ ಬರಗಾಲವಿದ್ದರೂ ಕೇಂದ್ರ ಸರ್ಕಾರ ನೆರವಿಗೆ ಬಾರದಿರುವ ವಿಚಾರವನ್ನೇ ಪ್ರತಿಪಕ್ಷಗಳ ಅಸ್ತ್ರಕ್ಕೆ ಗುರಾಣಿಯಾಗಿ ಬಳಸಲು ಆಡಳಿತ ಪಕ್ಷ ಸಜ್ಜಾಗಿದೆ. ಅಲ್ಲದೆ, ಗ್ಯಾರಂಟಿ ಅನುಷ್ಠಾನ ಹಾಗೂ ಬರದ ವಿಚಾರದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸದನದ ಮುಂದಿಟ್ಟು ಬಲವಾಗಿ ಸಮರ್ಥಿಸಿಕೊಳ್ಳಲು ಸರ್ಕಾರವೂ ಕೂಡ ಸಿದ್ಧತೆ ನಡೆಸಿದೆ. ಮುಂಬರುವ ಲೋಕಸಭಾ ಚುನಾವಣೆ ತಯಾರಿಯ ಗುಂಗಿನಲ್ಲಿ ಮೂರು ಪಕ್ಷಗಳಿವೆ. ಹೀಗಾಗಿ ಅವೇಶನದ ವೇಳೆ ರಾಜಕೀಯ ಚಟುವಟಿಕೆಗಳು ಹೆಚ್ಚಾಗಲಿವೆ ಎಂಬ ಅಭಿಪ್ರಾಯವಿದೆ.
10
+ ಒಟ್ಟಾರೆ ಡಿಸೆಂಬರ್‍ನಲ್ಲಿ ಬೆಳಗಾವಿಯಲ್ಲಿ ನಡೆಯುವ ರಾಜ್ಯ ವಿಧಾನಮಂಡಲದ ಅಧಿವೇಶನವುಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಆರೋಪ- ಪ್ರತ್ಯಾರೋಪಗಳಿಗೆ ವೇದಿಕೆಯಾಗಲಿದೆ.
eesanje/url_46_313_9.txt ADDED
@@ -0,0 +1,7 @@
 
 
 
 
 
 
 
 
1
+ ಉಡುಪಿಯಲ್ಲಿ ತಾಯಿ-ಮಕ್ಕಳನ್ನು ಕೊಂದಿದ್ದು ಬೋಳುತಲೆಯ ವ್ಯಕ್ತಿಯೇ..?
2
+ ಬೆಂಗಳೂರು,ನ.13- ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ಸುಮಾರು 45 ವರ್ಷ ವಯಸ್ಸಿನ ಬೋಳು ತಲೆಯ ವ್ಯಕ್ತಿಯೇ ಉಡುಪಿಯ ನೇಜಾರಿನ ತೃಪ್ತಿನಗರದಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಹತ್ಯೆ ಮಾಡಿರುವ ಆರೋಪಿ ಎಂದು ಶಂಕಿಸಲಾಗಿದೆ. ದುಬೈನಲ್ಲಿ ಉದ್ಯೋಗದಲ್ಲಿರುವ ನೂರ್ ಮಹಮ್ಮದ್ ಅವರ ಪತ್ನಿ ಹಸೀನಾ ಮತ್ತು ಅವರ ಮೂವರು ಮಕ್ಕಳ ಹತ್ಯೆ ಮತ್ತು ವೃದ್ಧೆ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಡುಪಿ ಜಿಲ್ಲಾ ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ತಾಯಿ ಮತ್ತು ಅವರ ಮೂವರು ಮಕ್ಕಳನ್ನು ಅಮಾನವೀಯವಾಗಿ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿ ಪತ್ತೆಗಾಗಿ ಈಗಾಗಲೇ 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
3
+ ಈಗಾಗಲೇ ಆರೋಪಿ ಬಗ್ಗೆ ಕೆಲ ಮಾಹಿತಿಗಳು ದೊರೆತಿದ್ದು, ಪೊಲೀಸರ ಅನುಮಾನ 45 ವರ್ಷದ ಬೋಳು ತಲೆಯ ವ್ಯಕ್ತಿಯ ಮೇಲೆ ಬಿದ್ದಿದ್ದು, ಆತನ ಬಂಧನಕ್ಕಾಗಿ ಜಾಲ ಬೀಸಿದ್ದಾರೆ. ಕೊಲೆಯಾದ ದಿನ ಬೋಳು ತಲೆಯ ವ್ಯಕ್ತಿಯನ್ನು ಸಂತೆಕಟ್ಟೆಯಿಂದ ತೃಪ್ತಿನಗರಕ್ಕೆ ಡ್ರಾಪ್ ಮಾಡಿದೆ ಆತ ಬಿಳಿ ಅಂಗಿ ಧರಿಸಿದ್ದ ಬೆಳಿಗ್ಗೆ 8.30 ರಲ್ಲಿ ಆತನನ್ನು ಡ್ರಾಪ್ ಮಾಡಿದ್ದೇ ಆದರೆ, ಅದೇ ವ್ಯಕ್ತಿ ಒಂದು ಗಂಟೆಯ ನಂತರ ಸಂತೆಕಟ್ಟೆಯಲ್ಲಿ ಕಾಣಿಸಿಕೊಂಡಿದ್ದ ಎಂದು ಸ್ಥಳೀಯ ಆಟೋ ಚಾಲಕ ನೀಡಿರುವ ಮಾಹಿತಿ ಹಂತಕನ ಬಂಧನಕ್ಕೆ ಪೊಲೀಸರಿಗೆ ಮಹತ್ವದ ಸುಳಿವು ನೀಡಿದೆ.
4
+ ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ
5
+ ಆಟೋ ಚಾಲಕನ ಮಾಹಿತಿ ಮೇರೆಗೆ ಪರಾರಿಯಾಗಿರುವ ಬೋಳು ತಲೆ ವ್ಯಕ್ತಿಯ ಬಂಧನಕ್ಕಾಗಿ ಶೋಧ ಮುಂದುವರೆಸಲಾಗಿದೆ. ಆತ ಸಂತೆಕಟ್ಟೆಯಿಂದ ಯಾವ ಕಡೆ ತೆರಳಿದ. ಇಲ್ಲವೇ ಆತನ ನಿವಾಸ ಅಕ್ಕಪಕ್ಕದಲ್ಲೇ ಇರಬಹುದೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
6
+ ಬೆಳಗ್ಗೆ ಮನೆಗೆ ನುಗ್ಗಿದ ಹಂತಕ ಮೊದಲು ಅಡುಗೆ ಮನೆಯಲ್ಲಿದ್ದ ಹಸೀನಾ ಅವರನ್ನು ಕೊಲೆ ಮಾಡಿದ, ಆಕೆಯನ್ನು ಬಿಡಿಸಿಕೊಳ್ಳಲು ಬಂದ ಮಕ್ಕಳನ್ನು ನಿರ್ದಯಿಯಾಗಿ ಕೊಂದು ಹಾಕಿ ನಂತರ ವೃದ್ಧೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ನೋಡಿದರೆ ಆತನಿಗೆ ಹಸೀನಾ ಕುಟುಂಬದ ಮೇಲೆ ಎಷ್ಟು ದ್ವೇಷ ಇತ್ತು ಎನ್ನುವುದಕ್ಕೆ ಉದಾಹರಣೆಯಾಗಿದೆ. ಅದರಲ್ಲೂ ಆತ ಕೃತ್ಯದ ನಂತರ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗದಿರುವುದನ್ನು ನೋಡಿದರೆ ವೈಯಕ್ತಿಕ ಕಾರಣದಿಂದಾಗಿ ಆತ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ಪೊಲೀಸರು.
7
+ ಈ ಮಧ್ಯೆ ದುಬೈನಲ್ಲಿ ಉದ್ಯೋಗದಲ್ಲಿದ್ದ ಪತಿ ನೂರ್ ಮಹಮ್ಮದ್ ಹಾಗೂ ಬೆಂಗಳೂರಿನ ಏರ್‍ಪೆಪೊರ್ಟ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ಪುತ್ರ ನೇಜಾರಿಗೆ ಆಗಮಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಅವುಗಳನ್ನು ಕುಟುಂಬ���್ಥರಿಗೆ ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ಎಫ್‍ಎಸ್‍ಎಲ್ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಹಂತಕ ಬಿಟ್ಟು ಹೋಗಿರಬಹುದಾದ ಸಾಕ್ಷ್ಯ ಸಂಗ್ರಹದಲ್ಲಿ ನಿರತರಾಗಿದ್ದಾರೆ.
eesanje/url_46_314_1.txt ADDED
@@ -0,0 +1,5 @@
 
 
 
 
 
 
1
+ ಆಂಬುಲೆನ್ಸ್ ನಲ್ಲಿ ಜಾಲಿ ರೈಡ್ ಹೊರಟಿದ್ದವರಿಗೆ ದಂಡ
2
+ ಚಿಕ್ಕಮಗಳೂರು, ನ.13- ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಓರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ , ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೊರಟಿದ್ರು. ಆದ್ರೆ ಕೊಟ್ಟಿಗೆಹಾರ ಆಗಿ ಉಜಿರೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
3
+ ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟ್ ಮೂಲಕ ಉಜಿರೆ ಕಡೆ ಹೋಗುವಾಗ ಕೊಟ್ಟಿಗೆಹಾರದಲ್ಲಿ ರಸ್ತೆ ಉದ್ದಕ್ಕೂ ಕೇಕೆ ಹಾಕುತ್ತಾ ಹೋಗುತ್ತಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಅಂಬುಲೆನ್ಸ್‍ನ್ನು ತಡೆದು ವಿಚಾರಣೆ ಮಾಡಿದಾಗ ಗೆಳೆಯರು ಪ್ರವಾಸ ಬಂದಿರುವುದು ತಿಳಿದಿದೆ.
4
+ ಕಮಲ್‍ನಾಥ್ ನಮ್ಮವರಲ್ಲ, ಹೊರಗಿನವರು : ಶಿವರಾಜ್‍ಸಿಂಗ್ ಚೌಹಾಣ್
5
+ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಪಡೆದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅರ್ಜುನ್ ಅವರು, ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್‍ನನ್ನು ಉಜಿರೆ ಬೀಚ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ ಅದರಂತೆ ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ದಂಡ ಹಾಕಿದ್ದಾರೆ.
eesanje/url_46_314_10.txt ADDED
@@ -0,0 +1,5 @@
 
 
 
 
 
 
1
+ ಬಿಜೆಪಿ ಜೊತೆ ಜೆಡಿಎಸ್ ವಿಲೀನವಿಲ್ಲ : ಹೆಚ್‌ಡಿಕೆ
2
+ ಬೆಂಗಳೂರು, ನ.12- ಬಿಜೆಪಿ ಜತೆ ಜೆಡಿಎಸ್ ವಿಲೀನವಿಲ್ಲ. ಎನ್‍ಡಿಎ ಮೈತ್ರಿಕೂಟದಲ್ಲಿ ಇದ್ದೇವೆ ಅಷ್ಟೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸ್ವಾಗತಾರ್ಹ. ನಮ್ಮ ಹೋರಾಟ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯುವುದು. ಅದಕ್ಕಾಗಿ ಒಬ್ಬ ಯುವ ನಾಯಕನ ಅಗತ್ಯವಿತ್ತು. ಆ ಜವಾಬ್ದಾರಿಯನ್ನು ವಿಜಯೇಂದ್ರ ಅವರು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
4
+ ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು
5
+ ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆಯೂ ಆಗಬಹುದು. ಒಕ್ಕಲಿಗ ಲಿಂಗಾಯಿತ ಸಮೀಕರಣ ಎನ್ನುವುದಕ್ಕಿಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುವುದೇ ನಮ್ಮ ಉದ್ದೇಶ ಎಂದರು.
eesanje/url_46_314_11.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಕಾಂಗ್ರೆಸ್ ನಡೆ “ಒನ್ ಸ್ಟೇಟ್-ಮೆನಿ ಎಲೆಕ್ಷನ್” ಕಡೆ : ಕುಮಾರಸ್ವಾಮಿ
2
+ ಬೆಂಗಳೂರು,ನ.12- ದೇಶದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ರಾಜ್ಯದಲ್ಲಿ ಕಾಂಗ್ರೆಸ್ ಒನ್ ಸ್ಟೇಟ್-ಮೆನಿ ಎಲೆಕ್ಷನ್ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಅನಾನುಕೂಲಗಳ ಬಗ್ಗೆ ಸುದೀರ್ಘ ವಿವರಣೆ ನೀಡಿದ ಅವರು, ಪಂಚ ರಾಜ್ಯದ ಚುನಾವಣೆಯಲ್ಲೂ ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಭರವಸೆಯನ್ನು ಕಾಂಗ್ರೆಸ್ ನೀಡುತ್ತಿದೆ. ಅಲ್ಲಿನ ಮತದಾರರು ಮರುಳಾಗಬಾರದು. ಗ್ಯಾರಂಟಿ ಯೋಜನೆಗಳು ಆಶಾದಾಯಕವಾಗಿಲ್ಲ ಎಂದರು.
3
+ ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೆಬಂದಿದ್ದು, ಜನರ ಬದುಕಿನ ಭಾಗ್ಯದ ಬಾಗಿಲು ತೆಗೆದಿದ್ದೇವೆ ಎಂದು ಹೇಳುತ್ತಿದ್ದೆ. ಪ್ರತಿ ದಿನ ಕಾಂಗ್ರೆಸ್ ನಾಯಕರಿಂದ ಐದು ಗ್ಯಾರಂಟಿಗಳ ಭಜನೆಗಳನ್ನು ನಿತ್ಯ ಕೇಳುತ್ತಿದ್ದೇವೆ ಎಂದು ಟೀಕಿಸಿದರು.
4
+ ಗ್ಯಾರಂಟಿಗಳನ್ನು ರಾಷ್ಟ್ರಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಹೊರಟಿದೆ. ತೆಲಂಗಾಣ ಚುನಾವಣೆಗೆ ಟಿಸಿಎಂ, ಡಿಸಿಎಂ(ಟೆಂಪ್ರವರಿ ಚೀಫ್ ಮಿನಿಸ್ಟರ್, ಡ್ಯುಪ್ಲಿಕೇಟ್ ಚೀಫ್ ಮಿನಿಸ್ಟರ್) ಉಸ್ತುವಾರಿ ಇದ್ದಾರೆ. ಐದು ಗ್ಯಾರಂಟಿಗಳ ಬೆನ್ನು ತಟ್ಟಿಕೊಳ್ಳೋಕೆ ಹೋಗಿ ಬೇರೆ ರಾಜ್ಯದಲ್ಲಿ ನಗೆಪಾಟಲಿಗೆ ಈಡಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
5
+ ಗ್ಯಾರಂಟಿಗಳು ರಾಜ್ಯ, ರಾಷ್ಟ್ರದ ಅಭಿವೃದ್ಧಿಗೆ ಮಾರಕವಾಗಿವೆ. ತೆಲಂಗಾಣದಲ್ಲಿ ಕಾಂಗ್ರೆಸ್ 6 ಗ್ಯಾರಂಟಿ ಜಾರಿ ಮಾಡೋದಾಗಿ ಹೇಳಿದೆ. ಉಚಿತ ಗ್ಯಾರಂಟಿಗಳ ಕುರಿತಂತೆ ಮೋಸ ಹೋಗದೆ ಎಚ್ಚರಿಕೆಯಿಂದ ಇರಿ ಎಂದ ಅವರು ಪಂಚ ರಾಜ್ಯದ ಮತದಾರರಿಗೆ ಗ್ಯಾರಂಟಿ ಯೋಜನೆಗೆ ಮಾರುಹೋಗಬೇಡಿ ಎಂದು ಮನವಿ ಮಾಡಿದರು.
6
+ ಎರಡೂವರೆ ಸಾವಿರ ಲಕ್ಷ ಹುದ್ದೆ ಖಾಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಆಡಳಿತಾವಯಲ್ಲಿ ಎರಡು ಮುಕ್ಕಾಲು ಲಕ್ಷ ಸರ್ಕಾರಿ ನೌಕರರ ನೇಮಕಾತಿ ಏಕೆ ಆಗಿಲ್ಲ. ಸದ್ಯ ರಾಜ್ಯದಲ್ಲಿ ಎರಡೂವರೆ ಸಾವಿರ ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ಏಕೆ ನೇಮಕಾತಿ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಬೇರೆ ರಾಜ್ಯದ ಪ್ರನಾಳಿಕೆಯಲ್ಲಿ ಘೋಷಿಸುವ ಬದಲು ಮೊದಲು ನಮ್ಮ ರಾಜ್ಯದಲ್ಲಿ ಸರ್ಕಾರಿ ನೌಕರರ ನೇಮಕ ಮಾಡಿಲಿ. ತೋಟಗಾರಿಕೆ, ಕೃಷಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ನೌಕರರ ಕೊರತೆ ಇದೆ ಎಂದರು.
7
+ ಬಿಜೆಪಿ ಸರ್ಕಾರ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ 10 ಸಾವಿರ ಕೊಡ್ತಿತ್ತು. ತೆಲಂಗಾಣದಲ್ಲಿ ರೈತರಿಗೆ 15 ಸಾವಿರ ಕೊಡುವುದಾಗಿ ಡ್ಯುಪ್ಲಿಕೇಟ್ ಸಿಎಂ ಹೇಳಿದ್ದಾರೆ. ಆದರೆ ರಾಜ್ಯದ ರೈತರ ಹಿತ ಕಾಪಾಡುವ ಕೆಲಸ ಮರೆತು ಹೋಯಿತೆ ಎಂದು ಟೀಕಿಸಿದರು. ರೈತರಿಗೆ ಈ ಹಿಂದೆ ನೀಡುತ್ತಿದ್ದ 4 ಸಾವಿರ ಯಾಕೆ ಕಡಿತ ಮಾಡಿದಿರಿ? ಟಾರ್ಚ್ ಬೆಳಕಲ್ಲಿ ಅಕಾರಿ ಕೆಲಸ ಮಾಡಿದ್ದನ್ನ ಪ್ರಸ್ತಾಪಿಸಿದ ಹೆಚ್ ಡಿಕೆ, ಗೃಹ ಜ್ಯೋತಿ ಹೆಸರಲ್ಲಿ ಕತ್ತಲ ಭಾಗ್ಯ ನೀಡುತ್ತಿದೆ ಎಂದು ವ್ಯಂಗ್ಯವಾಡಿದರು.
8
+ ರೈತರಿಗೆ 24 ಗಂಟೆ ವಿದ್ಯುತ್ ನೀಡದ ಸರ್ಕಾರ ಬೇರೆ ರಾಜ್ಯದಲ್ಲಿ 24 ಗಂಟೆ ವಿದ್ಯುತ್ ನೀಡುವ ಕುರಿತು ಮಾತನಾಡುತ್ತಾರೆ. ಉಚಿತ ವಿದ್ಯುತ್ ಹೆಸರಲ್ಲಿ ಆಗಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಚುನಾವಣೆಗೂ ಮೊದಲು ಮಹದೇವಪ್ಪ ನಿಂಗೂ ಫ್ರೀ, ಕಾಕಾ ಪಾಟೀಲ್ ನಿಂಗೂ ಫ್ರೀ ಅಂತ ಘೋಷಿಸಿದ್ದರು. ಈಗ ಮಹದೇವಪ್ಪ ನಿಂಗೂ ಕತ್ತಲು ಕಾಕಾ ಪಾಟೀಲ್ ನಿಂಗೂ ಕತ್ತಲು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಇಂಧನ ಇಲಾಖೆ ಅಧೋಗತಿಗೆ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.
9
+ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ತಲುಪುತ್ತಿಲ್ಲ. ಕೇವಲ ನಾಮಾಕಾವಸ್ತೆ ಎನ್ನುವಂತೆ ಯೋಜನೆ ಜಾರಿ ಮಾಡಲಾಗಿದೆ. ಸಿಎಂ ತವರು ಕ್ಷೇತ್ರದಲ್ಲಿ 1.40 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ತಲುಪಿಲ್ಲಎಂದು ಅವರು ಆರೋಪಿಸಿದರು.
10
+ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಕಲ್ಪಿಸಿದ್ದಾರೆ. ಆದರೆ, ವಿದ್ಯಾರ್ಥಿಗಳು ಜೆಸಿಬಿಯಲ್ಲಿ ಪ್ರಯಾಣಿಸುವಂತಾಗಿದೆ. ಆಟೋ ಚಾಲಕರ ಜೀವನ ದುಸ್ತರವಾಗಿದೆ. ಇಂದಿರಾ ಕ್ಯಾಂಟೀನ್, ಗುತ್ತಿಗೆದಾರರಿಂದ ಕಮೀಷನ್ ಪಡೆಯಲಾಗುತ್ತಿದೆ ಎಂದು ಆರೋಪ ಮಾಡಿದರು.
11
+ ಸಮಾಜ ಕಲ್ಯಾಣ ಇಲಾಖೆಯ 11 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡುವುದು ಸರಿನಾ ಎಂದ ಅವರು, ಗ್ಯಾರಂಟಿ ಜಾರಿಗಾಗಿ ಸಾಲ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.
12
+ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣ, ಧರಂಸಿಂಗ್, ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಅವಧಿಯ 12 ವರ್ಷದಲ್ಲಿ 1 ಲಕ್ಷ ಕೋಟಿ ಸಾಲ ಮಾಡಲಾಗಿದೆ. ಆದರೆ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮೊದಲ ಐದು ವರ್ಷದಲ್ಲು 2.42 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದ ಅವರು, ಪ್ರಧಾನಿ ಅವರು ಮಾಡಿರುವ ಸಾಲದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
13
+ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
14
+ ಈಗ 5 ಲಕ್ಷದ 71 ಸಾವಿರ 655. ಕೋಟಿ ರಾಜ್ಯದ ಸಾಲ ಇದೆ. ಈ ವರ್ಷ 85,815 ಕೋಟಿ ಸಾಲದ ಗುರಿ ಇಟ್ಟುಕೊಂಡಿದ್ದೀರಿ. ಗ್ಯಾರಂಟಿಗಳ ಜಾರಿಗೆ 56 ಸಾವಿರ ಕೋಟಿ ಸಾಲ ಕಟ್ಟಬೇಕು. ಐದು ತಿಂಗಳಲ್ಲಿ ಆರ್ಥಿಕ ಸ್ಥಿತಿ ಹದಗೆಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
15
+ ರಾಜ್ಯದಲ್ಲಿ ದುಡ್ಡಿಗೆ ಕೊರತೆ ಇಲ್ಲ ಎನ್ನುವುದು ಐಟಿ ದಾಳಿಯಲ್ಲಿ ಬಟಾಬಯಲಾಗಿದೆ ಎಂದು ಆರೋಪಿಸಿದರು. ಯುವನಿ ಹೆಸರಲ್ಲಿ ಯುವಕರಿಗೆ ಉಂಡೆನಾಮ ಹಾಕುವ ಕೆಲಸವಾಗುತ್ತಿದೆ. ಚುನಾವಣೆಗಾಗಿ ರಾಜ್ಯದ ಜನತೆಯ ದಾರಿ ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೇ ಆರೋಪ ಮಾಡಿದರು.ಯರಗೋಳ ಅಭಿವೃದ್ಧಿಗೆ ಮೊದಲು ಹಣ ಕೊಟ್ಟಿದ್ದು ಕುಮಾರಸ್ವಾಮಿ ಅಂತಾ ಗೊತ್ತಿರಲಿ ಎಂದು ಸಿಎಂಗೆ ತಿರುಗೇಟು ನೀಡಿದರು.
16
+ ಅಭಿವೃದ್ಧಿ ಕಾರ್ಯಕ್ರಮ ಗಳಿಗೆ ಸರ್ಕಾರದ ಖಜಾನೆಯಲ್ಲಿ ಹಣದ ಕೊರತೆ ಇದೆ. ಆದರೆ, ಬ್ಲಾಕ್ ಮನಿಗೇನೂ ಕೊರತೆ ಇಲ್ಲ. ಯಾವ ಯಾವ ಅಧಿಕಾರಿಗಳ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಗ್ಯಾರಂಟಿಗಳ ಮೂಲಕ ವೈಎಸ್ಟಿ,ಎಸ್ ಎಸ್ಟಿ ಟ್ಯಾಕ್ಸ್ ಬೇರೆ ರಾಜ್ಯದಲ್ಲಿ ಜಾರಿಗೆ ಹೊರಟ್ಟೀದಿರಿ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ಸರ್ಕಾರ ನೊಟೀಸ್‍ನ ಮೇಲೆ ನಡೀತಿದೆ. ಸಿಎಂಗೆ ಹೈ ಕಮಾಂಡ್ ನೊಟೀಸ್ ಕೊಟ್ಟಿದೆ.
17
+ ಯಾರು ಹೆಚ್ಚು ಹಣ ಕೊಡ್ತಾರೋ ಅವರಿಗೆ ಅಧಿಕಾರ. ಇಂಥ ಟಾಸ್ಕ್ ನೀಡಿದೆ ಎಂಬ ಆರೋಪ ಮಾಡಿದರು. ಒಕ್ಕಲಿಗೆ ಲಿಂಗಾಯಿತ ಎಂಬುದಕ್ಕಿತ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡುವವರು ಬೇಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕವಾಗಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಉಪಸ್ಥಿತರಿದ್ದರು.
eesanje/url_46_314_12.txt ADDED
@@ -0,0 +1,6 @@
 
 
 
 
 
 
 
1
+ ‘ಮುಂದಿನ ಸಿಎಂ ವಿಜಯೇಂದ್ರ’ ಎಂದು ಘೋಷಣೆ ಕೂಗಿದ ಕಾರ್ಯಕರ್ತರು
2
+ ಬೆಂಗಳೂರು,ನ.12- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ, ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಎಂದು ಜೈಕಾರದ ಘೋಷಣೆಗಳನ್ನು ಕೂಗಿದ್ದಾರೆ.ಬೆಂಗಳೂರಿನಿಂದ ತುಮಕೂರಿಗೆ ಹೊರಟ ವೇಳೆ ಮಾರ್ಗಮಧ್ಯೆ ದಾಬಸ್ ಪೇಟೆ ಬಳಿ ಬಿಜೆಪಿಯ ನೂರಾರು ಕಾರ್ಯಕರ್ತರು ಕಾರು ತಡೆದು ಹೂವಿನಹಾರ ಹಾಕಿ ಪಟಾಕಿ ಸಿಡಿಸಿ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಘೋಷಣೆಗಳನ್ನು ಕೂಗಿದರು.
3
+ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ರಾಜಹುಲಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರಗೆ ಜಯವಾಗಲಿ ಎಂದು ಜೈಕಾರ ಕೂಗಿ ಶುಭ ಹಾರೈಸಿದರು. ಅಲ್ಲಿಂದ ತುಮಕೂರಿಗೆ ಆಗಮಿಸುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿಯ ಕಾರ್ಯಕರ್ತರು ಮತ್ತೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದೇ ಘೋಷಣೆ ಕೂಗಿದರು.
4
+ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
5
+ ದೊಡ್ಡ ಮಟ್ಟದಲ್ಲಿ ಸೇರಿದ್ದ ಕಾರ್ಯಕರ್ತರು ವಿಜಯೇಂದ್ರ ಆಗಮಿಸುತ್ತಿದ್ದಂತೆ ಪಟಾಕಿ ಹಚ್ಚಿ ಸಂಭ್ರಮಿಸಿದರು. ಅಲ್ಲಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀ ಸಿದ್ದಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದುಕೊಂಡರು. ಇದಕ್ಕೂ ಮೊದಲು ಮಠಕ್ಕೆ ಆಗಮಿಸಿದ ವಿಜಯೇಂದ್ರ ಅವರು ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
6
+ ಈ ವೇಳೆ ಸಂಸದರಾದ ಜಿ.ಎಸ್.ಬಸವರಾಜು, ಶಾಸಕರಾದ ಸುರೇಶ್ ಗೌಡ, ಎಸ್.ಆರ್.ವಿಶ್ವನಾಥ್, ರಾಮಮೂರ್ತಿ, ಮಾಜಿ ಶಾಸಕ ಪ್ರೀತಂಗೌಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮುಖಂಡರಾದ ರುದ್ರೇಶ್ ಸೇರಿದಂತೆ ಉಪಸ್ಥಿತರಿದ್ದರು.
eesanje/url_46_314_2.txt ADDED
@@ -0,0 +1,5 @@
 
 
 
 
 
 
1
+ ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ
2
+ ಉಡುಪಿ, ನ.13- ದೀಪಾವಳಿ ಪೂಜೆ ವೇಳೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಬೋಟುಗಳು ಸುಟ್ಟು ಕರಕಲಾಗಿರುವ ಘಟನೆ ಬೈಂದೂರಿನ ಗಂಗೊಳ್ಳಿಯಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಬೋಟ್ ಮಾಲೀಕರು ಪೂಜೆಯಲ್ಲಿ ಸಂಭ್ರಮದಲ್ಲಿದ್ದರು. ಮುಂಜಾನೆಯಿಂದಲೇ ಖುಷಿ ಖುಷಿಯಲ್ಲಿ ತಮ್ಮ ಬೋಟುಗಳು ಹಾಗೂ ಮೀನುಗಾರಿಕೆಗೆ ಬಳಸುವ ಯಂತ್ರಗಳು ಹಾಗೂ ವಸ್ತುಗಳಿಗೆ ಪೂಜೆ ಸಲ್ಲಿಸುತ್ತಿದ್ದರು.
3
+ ಈ ವೇಳೆ ಹಾರಿದ ಪಟಾಕಿ ಕಿಡಿ ಲಂಗರು ಹಾಕಿದ್ದ ಬೋಟುಗಳಿಗೆ ತಾಗಿ ಬೆಂಕಿ ಹತ್ತಿಕೊಂಡು ಉರಿದಿದೆ.ಬೋಟ್‍ನ ಇಂಜಿನ್‍ಗಳಿಗೆ ಬೆಂಕಿ ಕಿಡಿ ತಗುಲಿ ನೋಡನೋಡುತ್ತಿದ್ದಂತೆ ಏಳು ಬೋಟುಗಳು ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿದೆ.
4
+ ಆಗ್ರಾ ಹೋಟೆಲ್‍ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
5
+ ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ತಹಬದಿಗೆ ತಂದು ಅಕ್ಕಪಕ್ಕದ ಇತರ ಬೋಟುಗಳಿಗೆ ಹಬ್ಬುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.ಬೆಂಕಿ ಅವಘಡ ಮೀನುಗಾರರ ದೀಪಾವಳಿ ಸಂಭ್ರಮದಲ್ಲಿವನ್ನು ಕಸಿದುಕೊಂಡಿದೆ.
eesanje/url_46_314_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವಿಜಯೇಂದ್ರ ಆಯ್ಕೆ : ಹಿರಿಯರ ಅಪಸ್ವರಕ್ಕೆ ಹೈಕಮಾಂಡ್ ಅಂಕುಶ
2
+ ಬೆಂಗಳೂರು,ನ.13- ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಕುರಿತು ಯಾರೂ ಕೂಡ ಅಪಸ್ವರ ಎತ್ತಬಾರದೆಂದು ಕೇಂದ್ರ ಬಿಜೆಪಿ ನಾಯಕರು ಸ್ಥಳೀಯ ನಾಯಕರಿಗೆ ಕಟ್ಟಪ್ಪಣೆ ವಿಧಿಸಿದ್ದಾರೆ. ವಿಜಯೇಂದ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ನಂತರ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಲ ಹಿರಿಯರು ಬಹಿರಂಗವಾಗಿ ಮಾತನಾಡದಿದ್ದರೂ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.
3
+ ಕೆಲವರಂತೂ ಕನಿಷ್ಟ ಪಕ್ಷ ವಿಜಯೇಂದ್ರಗೆ ಶುಭಾಷಯವನ್ನು ಹೇಳದೆ ಅಂತರ ಕಾಪಾಡಿಕೊಂಡಿದ್ದರು. ಇದು ಮತ್ತೊಂದು ರೀತಯ ಭಿನ್ನಮತಕ್ಕೆ ದಾರಿ ಕಲ್ಪಿಸಲಿದೆ ಎಂಬುದನ್ನು ಅರಿತಿರುವ ಕೇಂದ್ರ ವರಿಷ್ಠರು ಪಕ್ಷದ ತೀರ್ಮಾನವನ್ನು ಯಾರೊಬ್ಬರೂ ಪ್ರಶ್ನಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಸೂಚಿಸಿದರು.
4
+ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಆಲೋಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ. ಅದೇ ರೀತಿ ಕರ್ನಾಟಕ ಬಿಜೆಪಿ ಘಟಕಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಮುನ್ನ ನಾವು ಎಲ್ಲ ಸಾಧಕಬಾಧಕಗಳನ್ನು ಚರ್ಚಿಸಿದ್ದೇವೆ. ವಿಜಯೇಂದ್ರ ನೇಮಕವಾದ ನಂತರ ವಿರೋಧ ವ್ಯಕ್ತಪಡಿಸುತ್ತಿರುವ ಔಚಿತ್ಯವಾದರೂ ಏನೆಂದು ಪ್ರಶ್ನಿಸಿದ್ದಾರೆ.
5
+ ದೆಹಲಿ ಮಟ್ಟದಲ್ಲಿ ಪ್ರಭಾವಿಯಾಗಿರುವ ರಾಜ್ಯವನ್ನು ಪ್ರತಿನಿಧಿಸುವ ಪ್ರಮುಖರೊಬ್ಬರು ಕೆಲ ಹಿರಿಯರ ಜೊತೆ ದೂರವಾಣಿ ಮುಖೇನ ಚರ್ಚಿಸಿ ಹೈಕಮಾಂಡ್ ತೀರ್ಮಾನಕ್ಕೆ ವಿರೋಧ ಬೇಡ ಎಲ್ಲರೂ ಸಹಕಾರ ಕೊಡಬೇಕೆಂದು ಸೂಚಿಸಿದ್ದಾರೆ.
6
+ ತಮಿಳುನಾಡಿನ 7 ಹಳ್ಳಿಗಳಲ್ಲಿ ಶಬ್ದರಹಿತ ದೀಪಾವಳಿ ಆಚರಣೆ
7
+ ಈ ಹಿಂದೆ ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಂದ ಬಹಿರಂಗವಾಗಿ ಮಾತನಾಡಿದ್ದರಿಂದ ಒಂದು ಸಮುದಾಯ ಮುನಿಸಿಕೊಂಡು ಫಲಿತಾಂಶದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ.ಲೋಕಸಭೆ ಚುನಾವಣೆ ನಮ್ಮೆಲ್ಲರಿಗೂ ಬಹುದೊಡ್ಡ ಸವಾಲಾಗಿದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಟ ಪಕ್ಷ 20 ಸ್ಥಾನಗಳನ್ನಾದರೂ ಗೆಲ್ಲಬೇಕು. ಇದು ಸಾಕಾರವಾಗಬೇಕಾದರೆ ಹಿರಿಯರು, ಕಿರಿಯರು ಸಹಕಾರ ಕೊಡಬೇಕು. ಪಕ್ಷದ ವಿರುದ್ಧ ಒಂದೇ ಒಂದು ಅಪಸ್ವರ ಬೇಡವೆಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
8
+ ಕೇವಲ ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕಾಗಿ ಅಧ್ಯಕ್ಷರನ್ನಾಗಿ ನೇಮಿಸಿಲ್ಲ. ಇಂತಹ ಪ್ರಮುಖ ತೀರ್ಮಾನ ತೆಗೆದುಕೊಳ್ಳುವ ಮುನ್ನ ರಾಷ್ಟ್ರೀಯ ನಾಯಕರು ಎಲ್ಲ ಆಯಾಮಗಳಲ್ಲೂ ಚರ್ಚೆ ಮಾಡಿರುತ್ತಾರೆ. ಅವರ ನಿರ್ಧಾರವು ನಮಗೆ ಒಪ್ಪಿಗೆ ಇದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ. ಅಂತಿಮವಾಗಿ ರಾಷ್ಟ್ರೀಯ ನಾಯಕರ ನಿರ್ಧಾರವನ್ನು ಗೌರವಿಸುವುದು ಮುಖ್ಯ ಎಂದು ರಾಜ್ಯ ನಾಯಕರಿಗೆ ಹೇಳಿದ್ದಾರೆ.
9
+ ಒಂದಿಬ್ಬರು ಬಹಿರಂಗವಾಗಿ ವಿಜಯೇಂದ್ರ ವಿರುದ್ಧ ಹೇಳಿಕೆ ಕೊಟ್ಟರೆ ವಿರೋಧ ಪಕ್ಷಗಳು ಅದನ್ನೇ ಅಸ್ತ್ರ ಮಾಡಿಕೊಳ್ಳಲಿವೆ. ಇದಕ್ಕೆ ಅವಕಾಶ ಕಲ್ಪಿಸಬಾರದೆಂದರೆ ಪಕ್ಷದ ನಿರ್ಧಾರವನ್ನು ಪ್ರಶ್ನಿಸಬಾರದು. ಎಲ್ಲರೂ ಸಹಕಾರ ಕೊಡುವಂತೆ ಸೂಚನೆ ಕೊಟ್ಟಿದ್ದಾರೆ.
10
+ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಮಾಜಿ ಸಚಿವರಾದ ವಿ.ಸೋಮಣ್ಣ, ಸಿ.ಟಿ.ರವಿ, ಬಸನಗೌಡ ಪಾಟೀಲ್ ಯತ್ನಾಳ್, ಕೆ.ಎಸ್.ಈಶ್ವರಪ್ಪ, ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಮತ್ತಿತರರು ಅಪಸ್ವರ ತೆಗೆದಿದ್ದರು.ಇದೀಗ ವರಿಷ್ಠರೇ ಮಧ್ಯಪ್ರವೇಶಿಸಿ ಭಿನ್ನಮತಕ್ಕೆ ಪೂರ್ಣ ವಿರಾಮ ಹಾಕುವ ಪ್ರಯತ್ನ ಮಾಡಿದ್ದಾರೆ.
eesanje/url_46_314_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಬಿಜೆಪಿ ಪದಾಧಿಕಾರಿಗಳ ಬದಲಾವಣೆ : ಕಮಲ ಪಾಳಯಕ್ಕೆ ಹೊಸ ವರ್ಚಸ್ಸು
2
+ ಬೆಂಗಳೂರು,ನ.13- ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿದಿರುವ ಬಿ.ವೈ.ವಿಜಯೇಂದ್ರ ಪಕ್ಷದೊಳಗೆ ಅಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿದ್ದು, ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಚಿಂತನೆಯಲ್ಲಿದ್ದಾರೆ. ಬುಧವಾರ ಬೆಳಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಾಗಿ ಮೊದಲು ಶಾಸಕಾಂಗ ಸಭೆಯನ್ನು ಕರೆಯಲಿದ್ದಾರೆ.
3
+ ಇದು ಮುಗಿದ ನಂತರ ನ.17 ಇಲ್ಲವೇ ಮುಂದಿನ ವಾರ ನವದೆಹಲಿಗೆ ತೆರಳಲಿರುವ ವಿಜಯೇಂದ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತಿತರರನ್ನು ಭೇಟಿಯಾಗಲಿದ್ದಾರೆ.
4
+ ಬಳಿಕ ಪಕ್ಷದ ಪದಾಧಿಕಾರಿಗಳ ಬದಲಾವಣೆಗೆ ಕೈ ಹಾಕುವ ಸಂಭವವಿದ್ದು, ಹಳಬರು, ಹೊಸಬರು,ಸಂಘದ ಪರಿವಾರದ ಹಿನ್ನಲೆಯುಳ್ಳವರು ಸೇರಿದಂತೆ ಎಲ್ಲರಿಗೂ ಸ್ಥಾನ ಕಲ್ಪಿಸುವ ಸಾಧ್ಯತೆ ಇದೆ. ಈ ಹಿಂದೆ ನೇಮಕವಾಗಿದ್ದ ಪದಾಧಿಕಾರಿಗಳ ಪಟ್ಟಿಯನ್ನು ಸಂಪೂರ್ಣವಾಗಿ ಬದಲಾಯಿಸಿ ಎಲ್ಲಾ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಿದ್ದಾರೆ.
5
+ ಈ ಮೊದಲು ನೇಮಕಗೊಂಡಿದ್ದ ಪದಾಧಿಕಾರಿಗಳ ಪಟ್ಟಿಯಲ್ಲಿ ಯಡಿಯೂರಪ್ಪ ಬೆಂಬಲಿಗರನ್ನು ಕಡೆಗಣಿಸಿ ಬಿ.ಎಲ್.ಸಂತೋಷ್ ಆಪ್ತರಿಗೆ ಮಣೆ ಹಾಕಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಹಿರಿಯ ಉಪಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿ, ಖಜಾಂಚಿ, ಕಚೇರಿ ಸಿಬ್ಬಂದಿ ಹೀಗೆ ಪಕ್ಷದಲ್ಲಿ ಪ್ರತಿಯೊಂದು ಹಂತದಲ್ಲೂ ಯಡಿಯೂರಪ್ಪ ಬೆಂಬಲಿಗರನ್ನು ಹೊರಗಿಟ್ಟು ಸಂತೋಷ್ ಆಪ್ತರಿಗೆ ಮಣೆ ಹಾಕಲಾಗಿತ್ತು ಎಂಬ ಅಸಮಾಧಾನವಿತ್ತು.
6
+ ಇದನ್ನು ಸರಿದೂಗಿಸಲು ಮುಂದಾಗಿರುವ ವಿಜಯೇಂದ್ರ ಯಾರೂ ಕೂಡ ಅಸಮಾಧಾನಗೊಳ್ಳದಂತೆ ಸಂತೋಷ್ ಮತ್ತು ಯಡಿಯೂರಪ್ಪ ಬಣ ಎನ್ನುವುದಕ್ಕೂ ಅವಕಾಶ ಕಲ್ಪಿಸದೆ ಎರಡೂ ಕಡೆಯವರೆಗೂ ಪದಾಧಿಕಾರಿಗಳ ಪಟ್ಟಿಯಲ್ಲಿ ಅವಕಾಶ ನೀಡುವ ಮೂಲಕ ತಕ್ಕಡಿಯನ್ನು ಸರಿದೂಗಿಸಲು ಮುಂದಾಗಿದ್ದಾರೆ.
7
+ ಮುಂದೆ ಲೋಕಸಭೆ, ಸ್ಥಳೀಯ ಸಂಸ್ಥೆ, ಬಿಬಿಎಂಪಿ ಸೇರಿದಂತೆ ವಿವಿಧ ಹಂತದ ಚುನಾವಣೆ ಇರುವುದರಿಂದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹಿರಿಯರು ವಿಜಯೇಂದ್ರಗೆ ಸಲಹೆಯನ್ನು ನೀಡಿದ್ದಾರೆ.
8
+ ಅಮೆರಿಕ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದ ಟಿಮ್ ಸ್ಕಾಟ್
9
+ ಕೇವಲ ನಿಮ್ಮ ಹಿಂದೆ ಇರುವವರಿಗೆ, ಜೈಕಾರ ಹಾಕುವವರಿಗೆ ಮಾತ್ರ ಪಕ್ಷದೊಳಗೆ ಮಣೆ ಹಾಕುವ ಸಂಪ್ರದಾಯವನ್ನು ನೀವು ಕೂಡ ಮುಂದುವರೆಸಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಾಗಲೇ ಮಾತ್ರ ಪಕ್ಷವನ್ನು ಬಲಿಷ್ಠವಾಗಿ ಸಂಘಟಿ��ಲು ಸಾಧ್ಯವಾಗುತ್ತದೆ. ಪಕ್ಷ ಸಂಘಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಎಷ್ಟೇ ವ್ಯತ್ಯಾಸಗಳು ಕಂಡುಬಂದರೂ ಸಂಘಟನೆಗೆ ಕೊರತೆಯಾಗದಂತೆ ಡಿಕೆಶಿ ಎಚ್ಚರಿಕೆ ಹೆಜ್ಜೆ ಇಟ್ಟರು.
10
+ ಪದಾಧಿಕಾರಿಗಳ ಆಯ್ಕೆಯಲ್ಲಿ ಮೂಲ ಕಾಂಗ್ರೆಸಿಗರ ಜೊತೆಗೆ ಸಿದ್ದರಾಮಯ್ಯ ಬೆಂಬಲಿಗರಿಗೂ ಅವಕಾಶ ಕಲ್ಪಿಸಿದರು. ನೀವು ಕೂಡ ಇದೇ ತಂತ್ರವನ್ನು ಅನುಸರಿಸಬೇಕು. ಪ್ರತಿಯೊಂದು ನಿರ್ಧಾರವು ಧವಳಗಿರಿಯಿಂದ ಆಗಬಾರದು. ಯಾವುದೇ ತೀರ್ಮಾನಗಳು ಜಗನ್ನಾಥ ಭವನದಲ್ಲಿಯೇ ನಡೆಯಬೇಕೆಂದು ಆರ್‍ಎಸ್‍ಎಸ್ ನಾಯಕರು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
11
+ ಪಕ್ಷವೆಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸ ಬಂದೇ ಬರುತ್ತದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋದಾಗಲೇ ನಾಯಕನಾಗಿ ಬೆಳೆಯಬಹುದು. ಬಿಜೆಪಿಯಲ್ಲಿ ಎಲ್ಲವೂ ಸರಿಯಿದೆ ಎಂದು ನಾವು ಹೇಳುವುದಿಲ್ಲ. ಹಿರಿಯರನ್ನು ಕಡೆಗಣಿಸದೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪದಾಧಿಕಾರಿಗಳನ್ನು ನೇಮಕ ಮಾಡುವಾಗ ಪಕ್ಷ ನಿಷ್ಠರಿಗೆ ಮೊದಲ ಆದ್ಯತೆ ಎಂದು ಕಿವಿಮಾತು ಹೇಳಿದ್ದಾರೆ.
eesanje/url_46_314_5.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿಜಯೇಂದ್ರಗೆ ಪಟ್ಟ : ಸೈಲೆಂಟ್ ಅದ ಸಿ.ಟಿ.ರವಿ, ಯತ್ನಾಳ್
2
+ ಬೆಂಗಳೂರು,ನ.12- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾಗಿರುವುದು ಪಕ್ಷದೊಳಗಿನ ಹಿರಿಯರಿಗೆ ಮುನಿಸು ತಂದಿದ್ದು ಇದು ಕಮಲದಲ್ಲಿ ಇನ್ನಷ್ಟು ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆ ಇದೆ. ನೇಮಕಾತಿ ಆದೇಶ ಹೊರಬಿದ್ದು, ಎರಡು ದಿನಗಳು ಕಳೆದರೂ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಅನೇಕರು ಒಂದೇ ಒಂದು ಶುಭಾಷಯವನ್ನೂ ಕೋರದೆ ಒಳಗೊಳಗೆ ಕುದಿಯುತ್ತಿದ್ದಾರೆ.
3
+ ವರಿಷ್ಠರ ಆದೇಶವನ್ನು ಪ್ರಶ್ನಿಸಲು ಆಗದೆ, ಒಪ್ಪಿಕೊಳ್ಳಲು ಆಗದೆ ಅನೇಕರು ಕೈ ಕೈ ಹಿಸುಕಿಕೊಳ್ಳುತ್ತಿದ್ದು, ಮುಂದಿನ ನಮ್ಮ ರಾಜಕೀಯ ಭವಿಷ್ಯವೇನು ಎನ್ನುತ್ತಿದ್ದಾರೆ. ಮಾಜಿ ಸಚಿವರಾದ ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಸಿ.ಟಿ.ರವಿ, ಶಾಸಕರಾದ ಅರವಿಂದ್ ಬೆಲ್ಲದ್ ಸೇರಿದಂತೆ ಅನೇಕರು ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಈ ಕ್ಷಣದವರೆಗೂ ಶುಭಾಷಯ ಕೋರಿಲ್ಲ.
4
+ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಾದರೂ ವಿಜಯೇಂದ್ರಗೆ ಶುಭಾಷಯ ಹೇಳದೆ ಮೌನ ವಹಿಸಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಕಾಂಗ್ರೆಸ್ ಪಕ್ಷವನ್ನು ಎಕ್ಸ್‍ನಲ್ಲಿ ಟೀಕಾ ಪ್ರಹಾರ ನಡೆಸಿದ ಈ ನಾಯಕರು ಯಡಿಯೂರಪ್ಪ ಪುತ್ರ ಎಂಬ ಒಂದೇ ಕಾರಣಕ್ಕಾಗಿ ಮುನಿಸಿಕೊಂಡಿದ್ದಾರೆ. ಭಾನುವಾರವೂ ಕೂಡ ಇದೇ ನಾಯಕರು ಬಿವೈವಿಗೆ ಶುಭಾಷಯ ಹೇಳದೆ ಮುಗ್ಗಾಮ್ಮಾಗಿ ಉಳಿದಿದ್ದಾರೆ.
5
+ ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು
6
+ ಮಾಜಿಕ ಜಾಲತಾಣದಲ್ಲಿ ಯಾವಾಗಲು ಸಕ್ರಿಯರಾಗಿರುತ್ತಿದ್ದ ಯತ್ನಾಳ್, ಸಿ.ಟಿ.ರವಿ ಶುಭ ಕೋರದೆ ಅಂತರ ಕಾಪಾಡಿಕೊಂಡಿರುವುದು ಬಿಜೆಪಿಯೊಳಗೆ ಮನೆಯೊಂದು ಮೂರು ಬಾಗಿಲು ಎಂಬುದನ್ನು ಸಾಬೀತುಪಡಿಸಿದೆ. ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ ಬೆಳೆಯಲ್ಲ ಭಾರತೀಯ ಜನತಾ ಪಾರ್ಟಿ ಯಾರ ಮೇಲೂ ನಿಂತಿಲ್ಲ. ನರೇಂದ್ರ ಮೋದಿ ಕೂಡಾ ಓರ್ವ ಬಿಜೆಪಿಯಲ್ಲಿ ಕಾರ್ಯಕರ್ತರು. ನಾನು ಕೂಡ ಕಾರ್ಯಕರ್ತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿರುವುದು ಪಕ್ಷದೊಳಗೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾರಿ ಹೇಳಿದೆ.
7
+ ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ. ಅವರು ಒಬ್ಬ ನಾಯಕ ಮಾತ್ರ, ಎಲ್ಲರೂ ಒಟ್ಟಾಗಿ 28 ಸ್ಥಾನ ಗೆಲ್ಲುತ್ತೇವೆ. ಸಾಮೂಹಿಕ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ.
8
+ ಇದಕ್ಕೆ ದನಿಗೂಡಿಸಿರುವ ಮಾಜಿ ಸಚಿವ ಸಿ.ಟಿ.ರವಿ, 35 ವರ್ಷಗಳ ರಾಜಕೀಯದಲ್ಲಿ ಈಗಾಗಲೇ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗು ಬಾಣವಾಗುತ್ತದೆ. ಪಕ್ಷ ನೇಮಕ ಮಾಡಿದೆ. ವೈಚಾರಿಕ ಸ್ಪಷ್ಟತೆಯ ಜೊತೆಗೆ ವಿಜಯೇಂದ್ರ ಪಕ್ಷ ಕಟ್ಟುವ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆಯಿದೆ. ಯಶಸ್ವಿಯಾಗಲಿ ಎಂದು ವ್ಯಂಗ್ಯಭರಿತವಾಗಿ ಹೇಳಿದ್ದಾರೆ.
9
+ ಒಟ್ಟಾರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಿರುವುದು ಬಿ.ಎಸ್. ಯಡಿಯೂರಪ್ಪ ಪಾಳಯದಲ್ಲಿ ಹರ್ಷ ಮೂಡಿಸಿದ್ದರೆ, ಅವರ ವಿರೋಗಳು ಮತ್ತು ಪ್ರಬಲ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದವರು ಮೆದುಧ್ವನಿಯಲ್ಲಿ ಅಸಮಾಧಾನ ಹೊರ ಹಾಕಲಾರಂಭಿಸಿದ್ದಾರೆ.
eesanje/url_46_314_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ನ.15ಕ್ಕೆ ವಿಜಯೇಂದ್ರ ಪದಗ್ರಹಣ, 16ಕ್ಕೆ ಕಾರ್ಯಕರ್ತರ ಬೃಹತ್ ಸಮಾವೇಶ
2
+ ಬೆಂಗಳೂರು,ನ.12- ಇದೇ ತಿಂಗಳ 15ರಂದು ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸುವುದಾಗಿ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 15ರಂದು ಜಗನ್ನಾಥ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಹಿರಿಯರ ಮಾರ್ಗದರ್ಶನದಂತೆ ಅಧಿಕಾರವನ್ನು ಸ್ವೀಕರಿಸಲಿದ್ದೇನೆ ಎಂದು ತಿಳಿಸಿದರು.
3
+ ನಿರ್ಗಮಿತ ಅಧ್ಯಕ್ಷರಾದ ನಳೀನ್‍ಕುಮಾರ್ ಕಟೀಲ್ ಅವರು ಅಧ್ಯಕ್ಷರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ.ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಸಂಘಟನೆ ಮಾಡಿ ನಮಗೆ ದೊಡ್ಡ ಗೆಲುವು ತಂದುಕೊಟ್ಟಿದ್ದರು.ಅವರ ನೇತೃತ್ವದಲ್ಲಿ ಬಿಜೆಪಿ ಸಾಧನೆ ಮಾಡಿದೆ ಎಂದು ಬಣ್ಣಿಸಿದರು.
4
+ ನ.16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ನಡೆಸಲು ತೀರ್ಮಾನಿಸಲಾಗಿದೆ. ಪಕ್ಷಕ್ಕೆ ನವಚೈತನ್ಯ ನೀಡುವ ಉದ್ದೇಶದಿಂದ ನಾವು ಈ ತೀರ್ಮಾನಕ್ಕೆ ಬಂದಿದ್ದೇವೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಸಚಿವರಾದ ವಿ.ಸೋಮಣ್ಣ, ಗೋವಿಂದ ಕಾರಜೋಳ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
5
+ ರಾಜ್ಯದಲ್ಲಿ ಭೀಕರ ಬರಗಾಲ ಇರುವುದರಿಂದ ಇದರ ಬಗ್ಗೆ ನಮ್ಮ ಪಕ್ಷ ಮೊದಲ ಆದ್ಯತೆ ನೀಡಲಿದೆ. ಇದೇ 16ರಂದು ಶಾಸಕಾಂಗ ಸಭೆ ನಡೆಸಬೇಕೆಂಬ ತೀರ್ಮಾನಕ್ಕೆ ಬಂದಿದ್ದೇವೆ. ಪಕ್ಷದ ವರಿಷ್ಠರು ವೀಕ್ಷಕರನ್ನು ಕಳುಹಿಸಿಕೊಡಲಿದ್ದಾರೆ. ಎಲ್ಲರ ಜೊತೆ ಚರ್ಚಿಸಿ ಸರ್ವಸಮ್ಮತವಾಗಿರುವ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವುದಾಗಿ ಹೇಳಿದರು.
6
+ ಒಂದು ರಾಷ್ಟ್ರೀಯ ಪಕ್ಷ ಎಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಬಂದೇ ಬರುತ್ತವೆ. ಎಲ್ಲವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸಲಾಗುವುದು. ಯಾರನ್ನೂ ಕೂಡ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಪಕ್ಷ ಬಲವರ್ಧನೆ ಮಾಡಲಾಗುವುದು ಎಂದರು.
7
+ ಯಾರನ್ನು ಕೂಡ ಕಡೆಗಣಿಸುವ ಮಾತೇ ಇಲ್ಲ. ಕಾಂಗ್ರೆಸ್‍ನವರು ಏನೇ ಸಲಹೆ ಕೊಟ್ಟರೂ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇವೆ. ನಮಗೆ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು. ಆದರೆ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
8
+ ಸಿದ್ದಗಂಗಾ ಮಠದಿಂದ ಪಕ್ಷದ ಕಚೇರಿಗೆ ಭೇಟಿಕೊಟ್ಟ ಅವರು ಪದಾಕಾರಿಗಳನ್ನು ಭೇಟಿಯಾದರು. ಮೊದಲ ಬಾರಿಗೆ ಪಕ್ಷದ ಜವಬ್ದಾರಿಯಂತೆ ಶಾಸಕನಾಗಿದ್ದು, ಈಗ ಅಧ್ಯಕ್ಷನಾಗುತ್ತಿದ್ದೇನೆ. ಅದಕ್ಕಿಂತ ಮಿಗಿಲಾಗಿ ನಾನೊಬ್ಬ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಎಂದರು.
9
+ ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸಿ ದುಷ್ಟ ಮತ್ತು ಭ್ರಷ ಹಾಗೂ ಬಡವರ, ರೈತ ವಿರೋ ಸರಕಾರದ ವಿರುದ್ಧ ಹೋರಾಟಕ್ಕಿಳಿಯಬೇಕಿದೆ. ಜನರಿಗೆ ಸತ್ಯಾಂಶ ತಿಳಿಸುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ಕರೆ ನೀಡಿದರು.
10
+ ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು
11
+ ನಮ್ಮ ತಂದೆ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕೆಲಸವನ್ನು ಆರಂಭಿಸುವ ಮುನ್ನ ಸಿದ್ದಗಂಗಾಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆಯುತ್ತಿದ್ದರು. ಅದೇ ರೀತಿ ನಾನು ಕೂಡ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದರು.
12
+ ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ಬಿ.ಕೆ.ಮಂಜುನಾಥ್ , ಉಪಾಧ್ಯಕ್ಷ ಎಂ.ಬಿ.ನಂದೀಶ್, ಜಿ.ಬಿ. ಜ್ಯೋತಿ ಗಣೇಶ್, ಬಿ.ಸುರೇಶ್ ಗೌಡ , ಹುಲಿನಾಯ್ಕರ್ ಇದ್ದರು.
eesanje/url_46_314_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬೆಚ್ಚಿಬಿದ್ದ ಉಡುಪಿ : ಹಾಡಹಗಲೇ ಚಾಕುವಿನಿಂದ ಇರಿದು ತಾಯಿ-ಮಕ್ಕಳ ಕೊಲೆ
2
+ ಬೆಂಗಳೂರು, ನ.12- ಇಡೀ ರಾಜ್ಯ ದೀಪಾವಳಿ ಹಬ್ಬದ ಸಡಗರದಲ್ಲಿರುವ ಸಂದರ್ಭ ದಲ್ಲೇ ದೂರದ ಉಡುಪಿಯಲ್ಲೊಂದು ಅಮಾನವೀಯ ಕೃತ್ಯವೊಂದು ನಡೆದು ಹೋಗಿದೆ. ಏಕಾಏಕಿ ಮನೆಗೆ ನುಗ್ಗಿದ ಮಾಸ್ಕ್ ಧರಿಸಿದ್ದ ಹಂತಕನೊಬ್ಬ ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ವೃದ್ಧೆಯೊಬ್ಬರನ್ನು ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿರುವ ಘಟನೆ ಉಡುಪಿ ತಾಲೂಕಿನ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ.
3
+ ಈ ಘೋರ ಕೃತ್ಯದಲ್ಲಿ ಸಾವನ್ನಪ್ಪಿದ ದುರ್ದೈವಿ ಗಳನ್ನು ಹಸೀನಾ (46), ಮಕ್ಕಳಾದ ಅಪ್ನಾನ್(23), ಅಜ್ಞಾಝ್(21) ಹಾಗೂ 12 ವರ್ಷದ ಆಸೀಂ ಎಂದು ಗುರುತಿಸಲಾಗಿದೆ. ಹಂತಕನಿಂದ ಗಾಯಗೊಂಡ ಹಸೀನಾ ಅವರ ಅತ್ತೆ ಅಜೀರಾ ತಕ್ಷಣ ಸ್ನಾನದ ಮನೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರಿಂದ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
4
+ ಹಸೀನಾ ಅವರ ಪತಿ ದೂರದ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಆಗೊಮ್ಮೆ ಈಗೊಮ್ಮೆ ಊರಿಗೆ ಬಂದು ಹೋಗುತ್ತಿದ್ದ. ಉಳಿದಂತೆ ತಾಯಿ-ಮೂರು ಮಕ್ಕಳು ಹಾಗೂ ಆತ್ತೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಿಗ್ಗೆ 8.30ರ ಸಮಯದಲ್ಲಿ ಮಾಸ್ಕ್ ಧರಿಸಿಕೊಂಡು ಏಕಾಏಕಿ ಮನೆಗೆ ನುಗ್ಗಿದ ಹಂತಕ ಮೊದಲು ಹಸೀನಾ ಅವರನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ನಂತರ ಇಬ್ಬರು ಹೆಣ್ಣು ಮಕ್ಕಳಿಗೂ ಇರಿದಿದ್ದಾನೆ ಇದನ್ನು ಕಂಡು ಅತ್ತೆ ಗಾಬರಿಯಿಂದ ಸ್ನಾನದ ಮನೆಗೆ ಹೋಗಿ ತಪ್ಪಿಸಿಕೊಳ್ಳಲು ಹೋದ ಅತ್ತೆ ಮೇಲೂ ಹಂತಕ ಚಾಕು ಬೀಸಿದ್ದಾನೆ ಆದರೆ, ಅದೃಷ್ಟವಶಾತ್ ಆಕೆ ಪ್ರಾಣಾಪಾಯದಿಂದ ಪಾರಾಗಿ ಸ್ನಾನದ ಮನೆ ಬಾಗಿಲು ಹಾಕಿಕೊಳ್ಳುವಲ್ಲಿ ಯಶಸ್ವಿಯಾದ್ದರಿಂದ ಅವರು ಬಚಾವಾಗಿದ್ದಾರೆ.
5
+ ದೀಪಾವಳಿ ವೇಳೆ ಲಕ್ಷ್ಮೀಪೂಜೆ ಏಕೆ ಮಾಡಬೇಕು..? ಹೇಗೆ ಮಾಡಬೇಕು..?
6
+ ಈ ಸಂದರ್ಭದಲ್ಲಿ ಮನೆ ಹೊರಗೆ ಆಟವಾಡುತ್ತಿದ್ದ 12 ವರ್ಷದ ಆಸೀಂ ಒಳ ಬಂದಾಗ ಆ ಮಗುವನ್ನು ಹಂತಕ ನಿರ್ದಯವಾಗಿ ಕೊಲೆ ಮಾಡಿದ್ದಾನೆ. ಈ ಸಂದರ್ಭದಲ್ಲಿ ಮನೆಯವರ ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಪಕ್ಕದ ಮನೆಯ ಮಹಿಳೆ ಮನೆಗೆ ಬಂದಾಗ ಆಕೆಗೆ ಎದುರಾದ ಹಂತಕ ಕೂಗಾಡಿದರೆ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ.
7
+ ಮಾಸ್ಕ್ ಹಾಕಿಕೊಂಡು ಬಂದಿದ್ದ ಹಂತಕ ಮನೆಯಿಂದ ಹೊರಗೆ ತೆರಳಿ ಹೆಲ್ಮೆಟ್ ಹಾಕಿಕೊಂಡು ತಾನು ಬಂದಿದ್ದ ಸ್ಕೂಟಿಯಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ ಗಾಬರಿಯಿಂದ ಚೇತರಿಸಿಕೊಂಡ ಮಹಿಳೆ ವಿಷಯವನ್ನು ಅಕ್ಕಪಕ್ಕದವರಿಗೆ ತಿಳಿಸಿ ನಂತರ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
8
+ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಂತಕನಿಗಾಗ�� ಹುಡುಕಾಟ ಆರಂಭಿಸಿದ್ದಾರೆ. ಅಕ್ಕಪಕ್ಕದ ಮನೆಯವರ ಸಿಸಿ ಕ್ಯಾಮರಾಗಳ ವಿಡಿಯೋ ತುಣುಕುಗಳನ್ನು ಪರಿಶೀಲಿಸುತ್ತಿದ್ದು, ಕೊಲೆಗಾರನ ಬಂಧನಕ್ಕೆ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿದೆ.
9
+ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿ ಮತ್ತೊಬ್ಬರನ್ನು ತೀವ್ರವಾಗಿ ಗಾಯಗೊಳಿಸಿ ಪರಾರಿಯಾಗಲು ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಮಲ್ಪೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‍ಪಿ ಡಾ.ಕೆ.ಅರುಣ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
10
+ ಸಭ್ಯ ಕುಟುಂಬ:ಹಸೀನಾ ಅವರ ಕುಟುಂಬ ಕಳೆದ ಐವತ್ತು ವರ್ಷಗಳಿಂದ ತೃಪ್ತಿನಗರದಲ್ಲೇ ವಾಸಿಸುತ್ತಿದೆ. ಅವರದು ಸಭ್ಯ ಕುಟುಂಬ ಯಾವುದೆ ತಂಟೆ ತಕರಾರಿಗೂ ಹೋಗುತ್ತಿರಲಿಲ್ಲ. ಅವರ ಕುಟುಂಬ ವರ್ಗದವರು ಅನ್ಯೋನ್ಯವಾಗಿದ್ದರೂ. ದುಬೈನಲ್ಲಿರುವ ಪತಿ ಆಗೊಮ್ಮ ಈಗೊಮ್ಮೆ ಬಂದು ಹೋಗುತ್ತಿದ್ದರು. ಅವರು ಯಾರೊಂದಿಗೂ ಹಗೆ ಬೆಳೆಸಿಕೊಂಡಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
eesanje/url_46_314_8.txt ADDED
@@ -0,0 +1,4 @@
 
 
 
 
 
1
+ ಮಾಜಿ ಶಾಸಕರ ಜೇಬಿನಿಂದ ಹಣ ಕದಿಯಲು ಹೋಗಿ ಸಿಕ್ಕಿಬಿದ್ದ ಕಳ್ಳ
2
+ ಬೆಂಗಳೂರು,ನ.12- ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಾಜಿ ಶಾಸಕರೊಬ್ಬರ ಜೇಬಿಗೆ ಚಾಲಾಕಿಯೊಬ್ಬ ಹಣ ಎಗರಿಸಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಅವರು ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದರು.
3
+ ದೀಪಾವಳಿ ವೇಳೆ ಲಕ್ಷ್ಮೀಪೂಜೆ ಏಕೆ ಮಾಡಬೇಕು..? ಹೇಗೆ ಮಾಡಬೇಕು..?
4
+ ಇದೇ ಸಂದರ್ಭದಲ್ಲಿ ಬಿ.ವೈ.ವಿ ಅವರನ್ನು ಅಭಿನಂದಿಸಲು ತುರುವೇಕೆರೆಯ ಮಾಜಿ ಶಾಸಕ ಮಸಾಲ ಜಯರಾಮ್ ಕೂಡ ಆಗಮಿಸಿದ್ದರು. ಚಾಲಾಕಿ ಕಳ್ಳ ಅದ್ಹೇಗೊ ಮಠದೊಳಗೆ ಬಂದು ಜಯರಾಮ್ ಅವರ ಜೇಬಿಗೆ ಕೈ ಹಾಕಿ ಹಣ ಎಗರಿಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ. ಕೂಡಲೇ ಇದನ್ನು ಗಮನಿಸಿದ ಹಿಂಬಾಲಕರು ಆತನನ್ನು ಹಿಡಿದು ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದರು. ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆಗೊಳಪಡಿಸಿದ್ದಾರೆ.
eesanje/url_46_314_9.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮುಂಗಾರಿನಲ್ಲಿ ಕೊರತೆ; ಹಿಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ
2
+ ಬೆಂಗಳೂರು, ನ.12-ಆಗಸ್ಟ್‍ನಿಂದ ನಿರಂತರ ತೀವ್ರ ಮಳೆ ಕೊರತೆ ಉಂಟಾಗಿದ್ದ ರಾಜ್ಯದಲ್ಲಿ ಈಗ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ. ಕೆಲವೆಡೆ ಉತ್ತಮ ಮಳೆಯಾಗಿದೆ. ಇದರಿಂದ ಹಿಂಗಾರು ಬೆಳೆಗೆ ಅನುಕೂಲವಾಗಿದ್ದರೆ, ಮುಂಗಾಗರು ಹಂಗಾಮಿನ ಬೆಳೆಗಳಿಗೆ ಹಾನಿಯುಂಟಾಗಿದೆ.
3
+ ಮುಂಗಾರಿನಲ್ಲಿ ಉಂಟಾಗಿದ್ದ ಮಳೆ ಕೊರತೆಯೂ ಹಿಂಗಾರಿನಲ್ಲಿ ಚೇತರಿಸಿಕೊಂಡಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿರುವುದು ಕಂಡುಬಂದಿದೆ. ಆದರೂ ಕೊಯ್ಲಿಗೆ ಬಂದಿದ್ದ ಬತ್ತ, ರಾಗಿ ಮೊದಲಾದ ಬೆಳೆಗಳಿಗೆ ತೊಂದರೆಯಾಗಿದೆ. ಆದರೆ, ರಾಜ್ಯಾದ್ಯಂತ ತೀವ್ರ ಬರ ಪರಿಸ್ಥಿತಿ ಇರುವುದರಿಂದ ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಹಾನಿಗೀಡಾಗಿವೆ. ಹಿಂಗಾರು ಆರಂಭವೂ ವಿಳಂಬವಾದ ಹಿನ್ನೆಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆಯೂ ವಾಡಿಕೆ ಪ್ರಮಾಣದಲ್ಲಿ ಆಗಿಲ್ಲ.
4
+ ಇತ್ತೀಚೆಗೆ ಒಂದು ವಾರ ಕಾಲ ಬಿದ್ದ ಮಳೆಯಿಂದ ಬಿತ್ತನೆ ಮಾಡಿರುವ ಬೆಳೆಗಳಿಗೆ ಸಾಕಷ್ಟು ಅನುಕೂಲವಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದ ಹಿನ್ನೆಯಲ್ಲಿ ಜಲಾಶಯಗಳ ಒಳಹರಿವು ಸಹ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ.
5
+ ಮಳೆ ಕೊರತೆಯಿಂದಾಗಿ ಬಹುತೇಕ ಜಲಾಶಯಗಳ ಒಳಹರಿವು ನಿಂತಿತ್ತು. ಹಿಂಗಾರು ಚೇತರಿಸಿಕೊಂಡು ಬಹಳಷ್ಟು ಕಡೆಗಳಲ್ಲಿ ಉತ್ತಮ ಮಳೆಯಾದ್ದರಿಂದ ಪ್ರಮುಖ ಜಲಾಶಗಳಿಗೆ ಒಳಹರಿವಿನ ಪ್ರಮಾಣ ಸ್ವಲ್ಪ ಹೆಚ್ಚಿದೆ. ಈಗಾಗಲೇ ಚಳಿಗಾಲ ಆರಂಭವಾಗಿರುವುದರಿಂದ ಮುಂದೆ ಉತ್ತಮ ಮಳೆಯಾಗುವ ಸಾಧ್ಯತೆ ವಿರಳ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನವೆಂಬರ್ ಒಂದರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ.
6
+ ಈ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 53 ಮಿ.ಮೀ. ಇದ್ದು, 156 ಮಿ.ಮೀ.ನಷ್ಟು ಮಳೆಯಾಗಿದೆ. ಇದರಿಂದ ವಾಡಿಕೆಗಿಂತ ಶೇ. 156ರಷ್ಟು ಮಳೆಯಾದಂತಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 171, ಉತ್ತರ ಒಳನಾಡಿನಲ್ಲಿ ಶೇ.93, ಮಲೆನಾಡಿನಲ್ಲಿ ಶೇ.186 ಹಾಗೂ ಕರಾವಳಿಯಲ್ಲಿ ಶೇ.226ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
7
+ ನವೆಂಬರ್ ತಿಂಗಳು ಚಳಿಗಾಲವಾಗಿರುವುದರಿಂದ ವಾಡಿಕೆ ಮಳೆಯ ಪ್ರಮಾಣ ಕಡಿಮೆಯೇ ಇದೆ. ವಾತಾವರಣದಲ್ಲಿ ಉಂಟಾದ ಬದಲಾವಣೆಯಿಂದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಕಳೆದ ಒಂದು ವಾರದಲ್ಲೂ ವಾಡಿಕೆಗಿಂತ ಶೇ.277ರಷ್ಟು ಅಧಿಕ ಮಳೆಯಾಗಿದೆ. ಈ ಅವಧಿಯ ವಾಡಿಕೆ ಪ್ರಮಾಣ 13 ಮಿ.ಮೀ. ಆಗಿದ್ದು, 48 ಮಿ.ಮೀ.ನಷ್ಟು ಮಳೆಯಾಗಿದೆ.
8
+ ಮುಂಗಾರು ಆರಂಭವಾಗುವ ಜೂನ್‍ನಿಂದ ನಿನ್ನೆಯವರೆಗೆ ಶೇ.26ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಕ್ಟೋಬರ್ ಒಂದರಿಂದ ನಿನ್ನೆಯವರೆಗಿನ ಮಾಹಿತಿ ಅವಲೋಕಿಸಿದರೆ, ವಾಡಿಕೆ ಮಳೆ ಪ್ರಮಾಣ 152 ಮಿ.ಮೀ. ಇದ್ದು, ಕೇವಲ 99 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ರಾಜ್ಯದಲ್ಲಿ ಶೇ.35ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕರಾವಳಿಯಲ್ಲಿ ಶೆ.14ರಷ್ಟು ಹೆಚ್ಚು ಮಳೆಯಾಗಿದ್ದರೆ ಮಲೆನಾಡಿನಲ್ಲಿ ಶೇ. 10, ಉತ್ತರ ಒಳನಾಡಿನಲ್ಲಿ ಶೇ.72, ದಕ್ಷಿಣ ಒಳನಾಡಿನಲ್ಲಿ ಶೇ.25ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
9
+ ಜಲಾಶಯಗಳ ಮಾಹಿತಿ:ರಾಜ್ಯದ 14 ಪ್ರಮುಖ ಜಲಾಶಗಳ ಗರಿಷ್ಠ ನೀರು ಸಂಗ್ರಹ ಸಾಮಥ್ರ್ಯ 895.62 ಟಿಎಂಸಿ ಅಡಿ ಇದೆ. ಪ್ರಸ್ತುತ 480.34 ಟಿಎಂಸಿಯಷ್ಟು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಯಲ್ಲಿ 794.46 ಟಿಎಂಸಿಯಷ್ಟು ನೀರು ಸಂಗ್ರವಾಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 314 ಟಿಎಂಸಿಯಷ್ಟು ಕಡಿಮೆ ನೀರಿದೆ. ಒಟ್ಟಾರೆ ಎಲ್ಲಾ ಜಲಾಶಯಗಳಲ್ಲಿ ಸರಾಸರಿ ಶೇ.54ರಷ್ಟು ಮಾತ್ರ ನೀರಿದೆ. ಒಳಹರಿವಿನ ಪ್ರಮಾಣ 17787 ಕ್ಯುಸೆಕ್‍ನಷ್ಟಿದ್ದರೆ, ಹೊರ ಹರಿವು 24349 ಕ್ಯುಸೆಕ್‍ನಷ್ಟಿದೆ.
10
+ ಶಿಶುವಿಹಾರಗಳಲ್ಲಿ ಮದ್ದುಗುಂಡು ಮುಚ್ಚಿಟ್ಟಿರುವ ಹಮಾಸ್ ಉಗ್ರರು
11
+ ಜಲ ವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪ, ವರಾಹಿ ಜಲಾಶಯಗಳಿಗೆ 843 ಕ್ಯುಸೆಕ್ ಒಳಹರಿವಿದ್ದರೆ, 2581 ಕ್ಯುಸೆಕ್ ಹೊರ ಹರಿವಿದೆ. ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ, ಕೆಆರ್‍ಎಸ್ ಹಾಗೂ ಕಬಿನಿ ಜಲಾಶಯಗಳ ಒಳಹರಿವು 10 ಸಾವಿರ ಕ್ಯುಸೆಕ್‍ನಷ್ಟಿದ್ದು, ಹೊರ ಹರಿವು 1200 ಕ್ಯುಸೆಕ್‍ಗೂ ಹೆಚ್ಚಿದೆ.
12
+ ಕೃಷ್ಣಾ ಕೊಳದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಗೆ 6659 ಕ್ಯುಸೆಕ್‍ನಷ್ಟು ಒಳ ಹರಿವಿದ್ದರೆ, 19881ರಷ್ಟು ಹೊರ ಹರಿವಿದೆ. ವಾಣಿವಿಲಾಸ ಸಾಗರ ಜಲಾಶಯಕ್ಕೆ 17787 ಕ್ಯುಸೆಕ್‍ನಷ್ಟು ಒಳಹರಿವು ಇದ್ದರೆ, 24349ರಷ್ಟು ಹೊರ ಹರಿವಿದೆ.
13
+ ಮುಂಗಾರು ಮಳೆಯ ವೈಫಲ್ಯದಿಂದಾಗಿ ಈಗಾಗಲೇ ಕುಡಿಯುವ ನೀರು, ವಿದ್ಯುತ್ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಕಂಡುಬರುತ್ತಿದೆ. ಹಿಂಗಾರು ಕೂಡ ಕೈ ಕೊಟ್ಟರೆ, ಬೇಸಿಗೆಯಲ್ಲಿ ರಾಜ್ಯ ತೀವ್ರ ಸ್ವರೂಪದ ಸಮಸ್ಯೆ ಎದುರಿಸಬೇಕಾಗಬಹುದು.
eesanje/url_46_315_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು
2
+ ಗಾಜಾಪಟ್ಟಿ, ನ.12- ಯಾವುದೇ ಕಾರಣಕ್ಕೂ ಅಮಾಸ್ ಮೇಲಿನ ದಾಳಿಯನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. ಕದನ ವಿರಾಮಕ್ಕಾಗಿ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಕರೆಗಳನ್ನು ಕಡೆಗಣಿಸಿರುವ ಅವರು ಗಾಜಾದ ಆಡಳಿತಾರೂಢ ಹಮಾಸ್ ಉಗ್ರಗಾಮಿಗಳನ್ನು ಹತ್ತಿಕ್ಕಲು ಇಸ್ರೇಲ್‍ನ ಯುದ್ಧವು ಪೂರ್ಣ ಬಲದಿಂದ ಮುಂದುವರಿಯುತ್ತದೆ ಎಂದು ಹೇಳಿದರು.
3
+ ಗಾಜಾದಲ್ಲಿ ಉಗ್ರಗಾಮಿಗಳು ಒತ್ತೆಯಾಳುಗಳಾಗಿದ್ದ ಎಲ್ಲಾ 239 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ ಮಾತ್ರ ಕದನ ವಿರಾಮ ಸಾಧ್ಯ ಎಂದು ನೆತನ್ಯಾಹು ದೂರದರ್ಶನದ ಭಾಷಣದಲ್ಲಿ ಹೇಳಿದರು.
4
+ ಯುದ್ಧದ ಈಗ ಆರನೇ ವಾರಕ್ಕೆ ಪ್ರವೇಶಿಸುತ್ತಿರುವಾಗ, ಗಾಜಾವನ್ನು ಸೇನಾಮುಕ್ತಗೊಳಿಸಲಾಗುವುದು ಮತ್ತು ಇಸ್ರೇಲ್ ಅಲ್ಲಿ ಭದ್ರತಾ ನಿಯಂತ್ರಣವನ್ನು ಉಳಿಸಿಕೊಳ್ಳುತ್ತದೆ ಎಂದು ಇಸ್ರೇಲಿ ನಾಯಕಹೇಳಿದೆ. ಈ ಸ್ಥಾನವು ಇಸ್ರೇಲ್‍ನ ನಿಕಟ ಮಿತ್ರರಾಷ್ಟ್ರವಾದ ಯುನೈಟೆಡ್ ಸ್ಟೇಟ್ಸ್‍ನಿಂದ ತೇಲುತ್ತಿರುವ ಯುದ್ಧಾನಂತರದ ಸನ್ನಿವೇಶಗಳಿಗೆ ವಿರುದ್ಧವಾಗಿ ಕಂಡುಬರುತ್ತದೆ, ಇದು ಭೂಪ್ರದೇಶದ ಇಸ್ರೇಲಿ ಮರುಆಕ್ರಮಣವನ್ನು ವಿರೋಧಿಸುತ್ತದೆ ಎಂದು ಹೇಳಿದೆ.
5
+ ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್
6
+ ಭದ್ರತಾ ನಿಯಂತ್ರಣದ ಅರ್ಥವೇನು ಎಂದು ಕೇಳಿದಾಗ, ಉಗ್ರಗಾಮಿಗಳನ್ನು ಬೇಟೆಯಾಡಲು ಇಸ್ರೇಲಿ ಪಡೆಗಳು ಅಗತ್ಯವಿದ್ದಾಗ ಗಾಜಾವನ್ನು ಪ್ರವೇಶಿಸಲು ಶಕ್ತವಾಗಿರಬೇಕು ಎಂದು ನೆತನ್ಯಾಹು ಹೇಳಿದರು.
7
+ ಕೊನೆಯ ಜನರೇಟರ್‍ನಲ್ಲಿ ಇಂಧನ ಖಾಲಿಯಾಗಿದೆ ಎಂದು ಗಾಜಾದ ಅತಿದೊಡ್ಡ ಆಸ್ಪತ್ರೆಯ ಉದ್ರಿಕ್ತ ವೈದ್ಯರು ಹೇಳಿದ ನಂತರ ಇಸ್ರೇಲ್‍ನ ಮೇಲೆ ಒತ್ತಡ ಹೆಚ್ಚುತ್ತಿದೆ, ಇದು ಅಕಾಲಿಕ ಮಗು, ಇನ್ಕ್ಯುಬೇಟರ್‍ನಲ್ಲಿ ಮತ್ತೊಂದು ಮಗು ಮತ್ತು ಇತರ ನಾಲ್ವರು ರೋಗಿಗಳ ಸಾವಿಗೆ ಕಾರಣವಾಯಿತು. ಸಾವಿರಾರು ಜನರು ಯುದ್ಧದಲ್ಲಿ ಗಾಯಗೊಂಡರು, ವೈದ್ಯಕೀಯ ಸಿಬ್ಬಂದಿ ಮತ್ತು ಸ್ಥಳಾಂತರಗೊಂಡರು. ನಾಗರಿಕರು ಹೋರಾಟದಲ್ಲಿ ಸಿಕ್ಕಿಬಿದ್ದರು.
8
+ ಇತ್ತೀಚಿನ ದಿನಗಳಲ್ಲಿ, ಉತ್ತರ ಗಾಜಾದ ಶಿಫಾ ಮತ್ತು ಇತರ ಆಸ್ಪತ್ರೆಗಳ ಬಳಿ ಹೋರಾಟ ತೀವ್ರಗೊಂಡಿದೆ ಮತ್ತು ಸರಬರಾಜುಗಳು ಖಾಲಿಯಾಗಿವೆ. ಹಮಾಸ್ ಆಸ್ಪತ್ರೆಗಳಲ್ಲಿ ಮತ್ತು ಅದರ ಕೆಳಗೆ ಕಮಾಂಡ್ ಪೋಸ್ಟ್‍ಗಳನ್ನು ಸ್ಥಾಪಿಸಿದೆ, ನಾಗರಿಕರನ್ನು ಮಾನವ ಗುರಾಣಿಗಳಂತೆ ಬಳಸಿಕೊಂಡಿದೆ ಎಂದು ಇಸ್ರೇಲಿ ಮಿಲಿಟರಿ ಪುರಾವೆಗಳನ್ನು ಒದಗಿಸದೆ ಆರೋಪಿಸಿದೆ. ಶಿಫಾದಲ್ಲಿನ ವೈದ್ಯಕೀಯ ಸಿಬ್ಬಂದಿ ಅಂತಹ ಹಕ್ಕುಗಳನ್ನು ನಿರಾಕರಿಸಿದ್ದಾರೆ ಮತ್ತು ಇಸ್ರೇಲ್ ವಿವೇಚನಾರಹಿತ ದಾಳಿಯಿಂದ ನಾಗರಿಕರಿಗೆ ಹಾನಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
9
+ ���ಸ್ರೇಲಿ ಮಿಲಿಟರಿ ಗುಪ್ತಚರದ ಮಾಜಿ ಮುಖ್ಯಸ್ಥ ಅಮೋಸ್ ಯಾಡ್ಲಿನ್ ಬ್ರಾಡ್‍ಕಾಸ್ಟರ್ ಚಾನೆಲ್ 12 ಗೆ ಇಸ್ರೇಲ್ ಹಮಾಸ್ ಅನ್ನು ಹತ್ತಿಕ್ಕುವ ಗುರಿಯನ್ನು ಹೊಂದಿದ್ದು, ಆಸ್ಪತ್ರೆಗಳ ನಿಯಂತ್ರಣವನ್ನು ತೆಗೆದುಕೊಳ್ಳುವುದು ಪ್ರಮುಖವಾಗಿದೆ ಆದರೆ ರೋಗಿಗಳು, ಇತರ ನಾಗರಿಕರು ಮತ್ತು ಇಸ್ರೇಲಿ ಒತ್ತೆಯಾಳುಗಳನ್ನು ನೋಯಿಸದೆ ಸಾಕಷ್ಟು ಯುದ್ಧತಂತ್ರದ ಸೃಜನಶೀಲತೆ ಅಗತ್ಯವಿದೆ ಎಂದು ಹೇಳಿದರು.
10
+ ಇಬ್ಬರು ಮಕ್ಕಳು ಸೇರಿದಂತೆ ಜನರೇಟರ್ ಸ್ಥಗಿತಗೊಂಡ ನಂತರ ಶಿಫಾದಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ
eesanje/url_46_315_10.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಪಿಎಸ್‍ಐ ನೇಮಕಾತಿ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ
2
+ ಬೆಂಗಳೂರು,ನ.10- ಹಿಂದಿನ ಬಿಜೆಪಿ ಸರ್ಕಾರವನ್ನು ಬಿಟ್ಟುಬಿಡದಂತೆ ಪೆಡಂಬೂತವಾಗಿ ಕಾಡಿದ್ದ 545 ಪಿಎಸ್‍ಐ ನೇಮಕಾತಿ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಮರುಪರೀಕ್ಷೆ ನಡೆಸಲು ಆದೇಶ ನೀಡಿದೆ. ಸ್ವತಂತ್ರ ಸಂಸ್ಥೆಯಿಂದ ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಬೇಕೆಂದು ಹೈಕೋರ್ಟ್ ಆದೇಶಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಈ ಹಿಂದೆ ಪರೀಕ್ಷೆ ಬರೆದು ನೇಮಕಗೊಂಡಿದ್ದ ಅಭ್ಯರ್ಥಿಗಳಿಗೆ ತೀವ್ರ ನಿರಾಸೆಯಾಗಿದೆ.
3
+ ಸುದೀರ್ಘ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಾದ ದಿನೇಶ್‍ಕುಮಾ, ಟಿ.ಜಿ.ಶಿವಶಂಕರೇಗೌಡ ಅವರನ್ನೊಳಗೊಂಡ ದ್ವಿಸದಸ್ಯಪೀಠ ಹಿಂದಿನ ಬಿಜೆಪಿ ಸರ್ಕಾರ ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿದ್ದನ್ನು ಎತ್ತಿ ಹಿಡಿಯಿತು.
4
+ ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್‍ಐ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100 ಅಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿತ್ತು. ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿರುವುದರಿಂದ ರದ್ದುಪಡಿಸಿರುವ ಸರ್ಕಾರದ ಕ್ರಮ ಸರಿಯಾಗಿದೆ ಎಂದು ತೀರ್ಪಿನಲ್ಲಿ ನ್ಯಾಯಾೀಧಿಶರು ಉಲ್ಲೇಖಿಸಿದ್ದಾರೆ.
5
+ ಸುಮಾರು 3600ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯಲ್ಲಿ ಈಗಾಗಲೇ ಬಂಧನಕ್ಕೊಳಪಟ್ಟಿರುವ ಆರೋಪಿಗಳಿಂದ ಹೇಳಿಕೆಗಳನ್ನು ಪಡೆಯಲಾಗಿದ್ದು, ಕೆಲವರು ತಪ್ಪು ಒಪ್ಪಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿರುವುದರಿಂದ ಮುಂದೆ ಸ್ವತಂತ್ರ ಸಂಸ್ಥೆಯಿಂದ ಮರುಪರೀಕ್ಷೆ ನಡೆಸಬೇಕೆಂದು ಆದೇಶ ಮಾಡಿತು.
6
+ ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ
7
+ ಪ್ರಕರಣದ ಹಿನ್ನಲೆ: ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಇದಕ್ಕೆ ಪಿಎಸ್‍ಐ ಆಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
8
+ ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿದ್ದರು. ಬಳಿಕ ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು.
9
+ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪಿಎಸ್‍ಐ ನೇಮಕಾತಿಗೆ ಹೊಸದಾಗಿ ಲಿಖಿತ ಪರಿಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆ.27ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಳಿಕ ಆ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದೆ. ವಿಭಾಗೀಯ ಪೀಠವು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.
10
+ ಅರ್ಜಿ ಕುರಿತು ಆಗಸ್ಟ್ ತಿಂಗಳಿನಲ್ಲಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಿಎಸ್‍ಐ ಮರುಪರೀಕ್ಷೆ ನಡೆಸಬಹುದು ಎಂದು ಮೌಖೀಕವಾಗಿ ಅಭಿಪ್ರಾಯಪಟ್ಟಿತ್ತು. ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಸೇರಿ ಹಲವರನ್ನು ಸಿಐಡಿ ಬಂಧಿಸಿ ವಿಚಾರಣೆ ನಡೆಸಿತ್ತು. ಜೊತೆಗೆ ಅಕ್ರಮ ಎಸಗಿ ಪರೀಕ್ಷೆಯಲ್ಲಿ ಪಾಸ್ ಆಗಿ ಪಿಎಸ್‍ಐ ಆಗಿ ಆಯ್ಕೆಯಾಗಿದ್ದವರನ್ನು ಮತ್ತು ಅಕ್ರಮಕ್ಕೆ ಸಹಾಯ ಮಾಡಿದ್ದವರನ್ನು ಬಂಧಿಸಲಾಗಿತ್ತು.
11
+ ಮರುಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶಿಸಿರುವುದರಿಂದ ಹೊಸದಾಗಿ ಅರ್ಜಿ ಹಾಕಲು ಅವಕಾಶ ಇರುವುದಿಲ್ಲ. ಏಕೆಂದರೆ ಈ ಹಿಂದೆ ಯಾವೆಲ್ಲ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರೋ ಪುನಃ ಅವರೇ ಮರುಪರೀಕ್ಷೆಗೆ ಹಾಜರಾಗಬೇಕು. ಇಡೀ ಅಧಿಸೂಚನೆಯನ್ನೇ ಹಿಂದಿನ ಸರ್ಕಾರ ರದ್ದುಪಡಿಸಿದ್ದರೂ ಹೊಸದಾಗಿ ಮತ್ತೆ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿಲ್ಲ. ಹಿಂದಿನ ಅಧಿಸೂಚನೆಗೆ ಅನುಗುಣವಾಗಿಯೇ ಸ್ವತಂತ್ರ ಸಂಸ್ಥೆಯಿಂದ ಮರುಪರೀಕ್ಷೆಯನ್ನು ನಡೆಸಬೇಕಾಗುತ್ತದೆ.
12
+ ಹಿಂದಿನ ಬಿಜೆಪಿ ಸರ್ಕಾರಕ್ಕೆ ಪಿಎಸ್‍ಐ ಹಗರಣ ದೊಡ್ಡ ಕಂಟಕವಾಗಿ ಪರಿಣಮಿಸಿತ್ತು. ಅಂದು ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ಇದನ್ನು ದೊಡ್ಡ ಅಸ್ತ್ರವಾಗಿ ಮಾಡಿಕೊಂಡು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಇಡೀ ಸರ್ಕಾರದ ವಿರುದ್ಧ ಮುಗಿಬಿದ್ದಿತ್ತು. ಚುನಾವಣಾ ಪ್ರಚಾರದಲ್ಲಿ ಇದನ್ನೇ ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿಗೆ ಹಣ್ಣುಗಾಯಿ ನೀರುಗಾಯಿ ಮಾಡಿತ್ತು.
13
+ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಿಎಸ್‍ಐ ಹಗರಣವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಈ ತಿಂಗಳ ಅಂತ್ಯಕ್ಕೆ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಅವರು ಹೇಳಿರುವುದರಿಂದ ಯರ ಯಾರ ಕೊರಳಿಗೆ ಉರುಳಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.