CoolCoder44 commited on
Commit
2d41b0b
·
verified ·
1 Parent(s): ea1a6fd

e8084411cd7a364731dd87d8c2214e0ec59333581fc6d9f79d9eed4dfc678aa3

Browse files
Files changed (50) hide show
  1. eesanje/url_46_232_3.txt +6 -0
  2. eesanje/url_46_232_4.txt +5 -0
  3. eesanje/url_46_232_5.txt +8 -0
  4. eesanje/url_46_232_6.txt +9 -0
  5. eesanje/url_46_232_7.txt +6 -0
  6. eesanje/url_46_232_8.txt +11 -0
  7. eesanje/url_46_232_9.txt +5 -0
  8. eesanje/url_46_233_1.txt +11 -0
  9. eesanje/url_46_233_10.txt +5 -0
  10. eesanje/url_46_233_11.txt +8 -0
  11. eesanje/url_46_233_12.txt +12 -0
  12. eesanje/url_46_233_2.txt +8 -0
  13. eesanje/url_46_233_3.txt +5 -0
  14. eesanje/url_46_233_4.txt +4 -0
  15. eesanje/url_46_233_5.txt +4 -0
  16. eesanje/url_46_233_6.txt +5 -0
  17. eesanje/url_46_233_7.txt +8 -0
  18. eesanje/url_46_233_8.txt +7 -0
  19. eesanje/url_46_233_9.txt +8 -0
  20. eesanje/url_46_234_1.txt +5 -0
  21. eesanje/url_46_234_10.txt +5 -0
  22. eesanje/url_46_234_11.txt +6 -0
  23. eesanje/url_46_234_12.txt +13 -0
  24. eesanje/url_46_234_2.txt +10 -0
  25. eesanje/url_46_234_3.txt +5 -0
  26. eesanje/url_46_234_4.txt +5 -0
  27. eesanje/url_46_234_5.txt +5 -0
  28. eesanje/url_46_234_6.txt +5 -0
  29. eesanje/url_46_234_7.txt +5 -0
  30. eesanje/url_46_234_8.txt +5 -0
  31. eesanje/url_46_234_9.txt +11 -0
  32. eesanje/url_46_235_1.txt +4 -0
  33. eesanje/url_46_235_10.txt +6 -0
  34. eesanje/url_46_235_11.txt +6 -0
  35. eesanje/url_46_235_12.txt +10 -0
  36. eesanje/url_46_235_2.txt +7 -0
  37. eesanje/url_46_235_3.txt +6 -0
  38. eesanje/url_46_235_4.txt +5 -0
  39. eesanje/url_46_235_5.txt +6 -0
  40. eesanje/url_46_235_6.txt +7 -0
  41. eesanje/url_46_235_7.txt +11 -0
  42. eesanje/url_46_235_8.txt +3 -0
  43. eesanje/url_46_235_9.txt +5 -0
  44. eesanje/url_46_236_1.txt +18 -0
  45. eesanje/url_46_236_10.txt +7 -0
  46. eesanje/url_46_236_11.txt +10 -0
  47. eesanje/url_46_236_12.txt +8 -0
  48. eesanje/url_46_236_2.txt +7 -0
  49. eesanje/url_46_236_3.txt +10 -0
  50. eesanje/url_46_236_4.txt +6 -0
eesanje/url_46_232_3.txt ADDED
@@ -0,0 +1,6 @@
 
 
 
 
 
 
 
1
+ ಸರ್ಕಾರ ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ : ಬೊಮ್ಮಾಯಿ
2
+ ಬೆಂಗಳೂರು,ಫೆ.19- ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎಂದು ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸಮಾಜದಲ್ಲಿ ಮಕ್ಕಳಿಂದ ಹಿಡಿದು ಎಲ್ಲರಲ್ಲಿಯೂ ಸಂಘರ್ಷ ಉಂಟು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.
3
+ ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಅದೇ ಕಾರಣಕ್ಕೆ ನಾವು ಖಜಾನೆ ಖಾಲಿ ಇದೆ ಎಂದು ಹೇಳುತ್ತಿದ್ದೇವೆ. ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ. ಮೊದಲು ನಿಮ್ಮ ಶಾಲಾ ಮಕ್ಕಳಿಗೆ ಅನ್ನ ಕೊಡಿ ವಿದ್ಯೆ ಕೊಡಿ ಎಂದು ಕಿಡಿಕಾರಿದ್ದಾರೆ. ಬಡವರಿಗೆ ಅಕ್ಕಿಯನ್ನು ನರೇಂದ್ರಮೋದಿ ಸರ್ಕಾರ ಕೊಡುತ್ತಿದೆ. ಅದನ್ನೂ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ನೀಡುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
4
+ ವಿಧಾನಸಭೆಯಲ್ಲಿ ಅಲ್ಪಸಂಖ್ಯಾತರರ ಅಭಿವೃದ್ಧಿ ಅನುದಾನ ಕುರಿತ ಬಿಸಿಬಿಸಿ ಚರ್ಚೆ
5
+ ಆಂಗ್ಲ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ರಾಮಮಂದಿರ ಕುರಿತ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಮಮಂದಿರ 500 ವರ್ಷಗಳ ಹಿಂದೆಯೇ ಇದೆ. ಸಂತೋಷ ಲಾಡ್ ಏನು ಹೇಳಿಕೆ ನೀಡಿದ್ದಾರೊ ಗೊತ್ತಿಲ್ಲ. ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಎಂಪಿ ಸ್ಥಾನ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮುಂದಿನ ಮೂರು ತಿಂಗಳಲ್ಲಿ ಚುನಾವಣೆ ಫಲಿತಾಂಶ ಬರಲಿದೆ. ಸತ್ಯ ಎಂಬುದು ಗೊತ್ತಾಗಲಿದೆ. ಅವರಿಗೂ ಸತ್ಯ ಗೊತ್ತಿದೆ. ಅದಕ್ಕಾಗಿ ಅವರು ಕೇಂದ್ರ ರಾಜ್ಯ ಸರ್ಕಾರದ ನಡುವೆ ಕಂದಕ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
6
+ ಈಗಾಗಲೇ ಭಾರತದ ಜನರು ಬಿಜೆಪಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ನ ನಾಯಕರಾದ ಕಮಲ್ ನಾಥ್ ಸೇರಿದಂತೆ ಅನೇಕ ಹಿರಿಯ ನಾಯಕರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.
eesanje/url_46_232_4.txt ADDED
@@ -0,0 +1,5 @@
 
 
 
 
 
 
1
+ ಲೋಡ್ ಶೆಡ್ಡಿಂಗ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಕೆ.ಜೆ.ಜಾರ್ಜ್
2
+ ಬೆಂಗಳೂರು,ಫೆ.19- ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ ವಿದ್ಯುತ್‍ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಪರಿಷತ್‍ನಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಳೆ ಕೊರತೆಯಾಗಿದ್ದರೂ ಅಣೆಕಟ್ಟೆಗಳಲ್ಲಿ ಹೆಚ್ಚಿನ ನೀರು ಸಂಗ್ರಹವಾಗಿದ್ದರಿಂದ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿಲ್ಲ. ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತದೆ ಎಂದು ಹೇಳಿದರು.
3
+ ಇಲ್ಲಿಯವರೆಗೆ ವಿದ್ಯುತ್ ಅಭಾವ ಇಲ್ಲ. ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆಯಾಗಲಿದೆ. ಬೇರೆ ಬೇರೆ ರಾಜ್ಯಗಳಿಂದಲೂ ವಿದ್ಯುತ್ ಖರೀದಿಗೆ ಕ್ರಮ ವಹಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಯ ಜನಪ್ರತಿನಿಧಿಗಳ ಜೊತೆ ಈಗಾಗಲೇ ಸಭೆ ಮಾಡಿದ್ದೇವೆ ಎಂದು ತಿಳಿಸಿದರು. ಆರು ಲಕ್ಷ ಕಿಮೀ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಆಗುತ್ತಿದೆ. ಒಟ್ಟು 10 ಲಕ್ಷ ಟ್ರಾನ್ಸ್‍ಫರ್ಮರ್‍ಗಳು ಇವೆ. ಬಹುತೇಕ ರೈತರು ಕೃಷಿ ಪಂಪ್‍ಸೆಟ್‍ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಆದರೆ ನಾವು ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ. ಐಪಿ ಸೆಟ್ ಪಡೆದು ಸಕ್ರಮ ಮಾಡಿಕೊಳ್ಳುವಂತೆ ರೈತರಿಗೆ ಮನವಿ ಮಾಡುತ್ತಿದ್ದೇವೆ.
4
+ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ
5
+ ಗ್ರಾಮೀಣ ಭಾಗದಲ್ಲಿ ಸಮಸ್ಯೆಯಾದ ಟ್ರಾನ್ಸ್‍ಫರ್ಮರ್‍ಗಳನ್ನು 48 ಘಂಟೆಯೊಳಗೆ ಕೊಡಿ. ನಗರ ವ್ಯಾಪ್ತಿಯಲ್ಲಿ 24 ಘಂಟೆಯೊಳಗೆ ಕೊಡಿ ಎಂದು ಸೂಚನೆ ನೀಡಿದ್ದೇನೆ ಎಂದರು. ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ರಾತ್ರಿ ಸಮಯದಲ್ಲಿ ರೈತರು ಹೊಲಗದ್ದೆಗಳಿಗೆ ಹೋಗಲು ಆಗುವುದಿಲ್ಲ. ಸಾರ್ವಜನಿಕವಾಗಿ ತ್ರಿ ಫೇಸ್ ಕರೆಂಟ್ ಅವ ಪ್ರಕಟ ಮಾಡಿ ಎಂದಾಗ, ಮಾದ್ಯಮಗಳಲ್ಲಿ ಸಮಯದ ಅವಧಿಯನ್ನು ಪ್ರಕಟ ಮಾಡಲು ಸೂಚನೆ ಕೊಡುತ್ತೇನೆ ಎಂದು ಜಾರ್ಜ್ ಪ್ರತಿಕ್ರಿಯಿಸಿದರು.
eesanje/url_46_232_5.txt ADDED
@@ -0,0 +1,8 @@
 
 
 
 
 
 
 
 
 
1
+ ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ : ಮಧುಬಂಗಾರಪ್ಪ
2
+ ಬೆಂಗಳೂರು,ಫೆ.19- ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಎಷ್ಟು ಸಾಧ್ಯವೋ ಅಷ್ಟು ಬೇಗ ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯರಾದ ಮರಿತಿಬ್ಬೇಗೌಡ ಹಾಗೂ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಶಾಲೆ ಜೊತೆಗೆ ಅನುದಾನಿತ ಶಾಲೆಯನ್ನೂ ಪರಿಗಣಿಸುತ್ತೇವೆ. ಹೈಕೋರ್ಟ್‍ನಲ್ಲಿ ತಡೆಯಾಜ್ಞೆ ಇರುವುದರಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ ಎಂಬುದನ್ನು ಒಪ್ಪಿಕೊಂಡರು.
3
+ ಕಳೆದ ಎಂಟು ವರ್ಷಗಳಿಂದ ನೇಮಕಾತಿಯನ್ನು ಮಾಡಿಕೊಂಡಿಲ್ಲ. ತಡೆಯಾಜ್ಞೆ ತೆರವುಗೊಳಿಸುವ ಸಂಬಂಧ, ಅಡ್ವೋಕೇಟ್ ಜನರಲ್‍ಜೊತೆ ಚರ್ಚಿಸಲಾಗಿದೆ. ಕಳೆದ ಎಂಟು ತಿಂಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರವೇ ನೇಮಕಾತಿ ಮಾಡುತ್ತೇವೆ, ಕೋರ್ಟ್ ಕೇಸ್ ಬಗ್ಗೆ ಕೂಡ ಹೆಚ್ಚು ಗಮನ ಕೊಡುತ್ತೇವೆ ಎಂದು ಹೇಳೀದರು.
4
+ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ
5
+ ಅನುದಾನಿತ ಶಾಲೆಗಳಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅವರಿಂದ ಅನುಮತಿ ಪಡೆಯುವುದಷ್ಟೇ ಬಾಕಿ ಇದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆ ಎರಡಕ್ಕೂ ಒಂದೇ ಮಾನದಂಡ ಎಂದು ಸ್ಪಷ್ಟಪಡಿಸಿದರು. ಇದಕ್ಕೂ ಮುನ್ನ ಸಂಕನೂರ ಪ್ರಶ್ನೆ ಕೇಳಿ, ಅನುದಾನಿತ ಶಾಲೆಗಳಲ್ಲಿ ನಿವೃತ್ತಿ, ರಾಜೀನಾಮೆ ಹಾಗೂ ಇನ್ನಿತರೆ ಕಾರಣದಿಂದ 2016ರಿಂದ ಇಲ್ಲಿಯವರೆಗೂ ಎಷ್ಟು ಖಾಲಿ ಹುದ್ದೆ ಇದೆ. ಹುದ್ದೆ ಭರ್ತಿಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊರತೆಯಾಗಿದೆ ಎಂದು ಆಕ್ಷೇಪಿಸಿದರು.
6
+ ಅನುದಾನಿತ ಶಾಲೆಯಲ್ಲಿ ಸಂಪನ್ಮೂಲದ ಕೊರತೆ ಇರುವುದರಿಂದ ವೇತನದ ಬಗ್ಗೆಯೂ ಗಮನಹರಿಸುತ್ತೇವೆ. ಸಂಜೀವಿನಿ ಮೂಲಕ ವಿಮೆ ಮಾಡುವ ಬಗ್ಗೆಯೂ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಎಂಟು ವರ್ಷದಿಂದ ನಡೆಯುತ್ತಲೇ ಇದೆ. ಸಮರ್ಪಕ ಉತ್ತರ ಬರುತ್ತಿಲ್ಲ. ಟೀಚರ್ ಇಲ್ಲದೆ ವಿದ್ಯಾರ್ಥಿಗಳು ಕಲಿಕೆಗೆ ಹಿನ್ನಡೆಯಾಗಿದೆ. ಏಡೆಡ್ ಶಾಲೆಗಳ ಶಿಕ್ಷಕರಿಗೆ ವಿಮಾ ಯೋಜನೆ ನೀಡಬೇಕು. ಬೇಕಿದ್ದರೆ ವೇತನದಲ್ಲೇ ಶೇ.50ರಷ್ಟು ಹಿಡಿಯಿರಿ ಎಂದು ಸದಸ್ಯ ಸಂಕನೂರು ಸಲಹೆ ಮಾಡಿದರು.
7
+ ರಾಜಕೀಯ ಮಾತುಕತೆ ಆರಂಭಿಸಿದ ಪವನ್‍ಕಲ್ಯಾಣ್
8
+ ಹಣಕಾಸು ಇಲಾಖೆಯಿಂದ ಮಂಜೂರಾದ ಹುದೆಗಳನ್ನೂ ಭರ್ತಿ ಮಾಡಿಲ್ಲ. ಇನ್ನು ಎಷ್ಟು ದಿನ ಕಾಯಬೇಕು? ಹೈಕೋರ್ಟ್ ಹೇಳಿದ ಮೇಲೂ ನೇಮಕಾತಿ ಮಾಡಿಲ್ಲ. ಹೈಕೋರ್ಟ್ ಆದೇಶಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಹುದ್ದೆಗಳನ್ನು ತ್ವರಿತವಾಗಿ ಭರ್���ಿ ಮಾಡಲು ನಾನು ಬದ್ದನಿದ್ದೇನೆ. ಶೀಘ್ರವೇ ಭರ್ತಿ ಮಾಡುವ ಕೆಲಸ ಆಗಲಿದೆ. ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸಕ್ಕೆ ಬದ್ದ. ಕೋರ್ಟ್ ಆದೇಶದ ಮೂಲಕವೇ ನೇಮಕವಾಗಬೇಕು. ಅದಕ್ಕೆ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.ವೇತನದಲ್ಲಿ ಕಡಿತ ಮಾಡಿ ಶಿಕ್ಷಕರಿಗೆ ವಿಮೆ ಯೋಜನೆ ಜಾರಿಗೊಳಿಸುವ ಪ್ರಕ್ರಿಯೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
eesanje/url_46_232_6.txt ADDED
@@ -0,0 +1,9 @@
 
 
 
 
 
 
 
 
 
 
1
+ ಜೈನಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ
2
+ ಬೆಂಗಳೂರು,ಫೆ.19-ಜೈನಮುನಿಗಳಾದ ಆಚಾರ್ಯ ವಿದ್ಯಾಸಾಗರ ಮಹಾರಾಜರ ನಿಧನಕ್ಕೆ ವಿಧಾನಸಭೆಯಲ್ಲಿಂದು ಸಂತಾಪ ಸೂಚಿಸಲಾಯಿತು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸಂತಾಪ ಸೂಚನಾ ನಿರ್ಣಯವನ್ನು ಕೈಗೆತ್ತಿಕೊಂಡು, ವಿದ್ಯಾಸಾಗರ ಮಹಾರಾಜರು ನಿಧನರಾಗಿರುವುದನ್ನು ಅತ್ಯಂತ ವಿಷಾದದಿಂದ ಸದನಕ್ಕೆ ತಿಳಿಸಿದರು.
3
+ ವಿದ್ಯಾಸಾಗರ ಮಹಾರಾಜರು 1946 ರ ಅಕ್ಟೋಬರ್ 10 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗದಲ್ಲಿ ಜನಿಸಿದರು. ದಿಗಂಬರ ಜೈನ ಪಂಥದವರಾಗಿದ್ದ ಮುನಿಗಳು ತಮ್ಮ 22ನೇ ವಯಸ್ಸಿನಲ್ಲಿ ಆಚಾರ್ಯ ಜ್ಞಾನಸಾಗರ ಮುನಿಮಹಾರಾಜರಿಂದ ಮುನಿದೀಕ್ಷೆ ಪಡೆದು ನಂತರ ಆಚಾರ್ಯ ಪದವಿ ಪಡೆದಿದ್ದ ವಿದ್ಯಾಸಾಗರ ಮಹಾರಾಜರು ಸಂಸ್ಕøತ, ಪ್ರಾಕೃತ ಭಾಷೆಗಳು ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದು, ನಿರಂಜನ ಶತಕ, ಭಾವನ ಶತಕ, ಶ್ರಮನ ಶತಕ ಪ್ರಮುಖವಾಗಿವೆ. ಅಲ್ಲದೆ ಕನ್ನಡ, ಹಿಂದಿ, ಮರಾಠಿ ಸೇರಿದಂತೆ 8 ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದ ಅವರು, ಹಿಂದಿಯಲ್ಲಿ ರಚಿಸಿದ ಮೂಖಮಾಠಿ ಎಂಬ ಮಹಾಕಾವ್ಯವು ಪ್ರಸಿದ್ಧಿಯಾಗಿದೆ ಎಂದು ಹೇಳಿದರು.
4
+ ಜೈನಮುನಿಗಳಾಗಿ ವಿದ್ಯಾಸಾಗರ ಮಹಾರಾಜರು 120 ಜನರಿಗೆ ಮುನಿದೀಕ್ಷೆಯನ್ನು ನೀಡಿದ್ದು, ಹಲವರಿಗೆ ಬ್ರಹ್ಮಚರ್ಯ ದೀಕ್ಷೆಗಳನ್ನು ನೀಡಿದ್ದಾರೆ. ದೇಶದಲ್ಲಿಯೇ ಅತೀ ದೊಡ್ಡ ಗೋಶಾಲೆಯನ್ನು ನಿರ್ಮಿಸಿದ್ದು, ಬಡ ನಿರ್ಗತಿಕ ಮಕ್ಕಳಿಗೆ ಪದವಿಯವರೆಗೆ ಉಚಿತ ಶಿಕ್ಷಣವನ್ನು ನೀಡಿದ್ದಾರೆ ಎಂದು ಶ್ಲಾಘಿಸಿದರು. ತಮ್ಮ ಜೀವನದುದ್ದಕ್ಕೂ ಜೈನ ಧರ್ಮದ ತತ್ವಗಳನ್ನು ಪಾಲಿಸಿ, ಬೋಸುತ್ತಾ ಕವಿ, ಯೋಗಿ, ಸಾಧಕ-ಚಿಂತಕ ಹಾಗೂ ದಾರ್ಶನಿಕ ರೂಪದಲ್ಲಿ ಕಾಣಿಸಿಕೊಂಡಿದ್ದ ಮೇರು ಸಂತ ಆಚಾರ್ಯರು ಛತ್ತೀಸ್‍ಗಡ ರಾಜ್ಯದ ಡೋಂಗರಗಡದಲ್ಲಿರುವ ಚಂದ್ರಗಿರಿ ತೀರ್ಥದಲ್ಲಿ ಸಲ್ಲೇಖನ ವ್ರತ ಕೈಗೊಂಡು ನಿನ್ನೆ ನಸುಕಿನ ಜಾವ ಇಹಲೋಕವನ್ನು ತ್ಯಜಿಸಿದ್ದಾರೆ ಎಂದು ವಿಷಾದಿಸಿದರು.
5
+ ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ
6
+ ಸಭಾಧ್ಯಕ್ಷರು ಮಂಡಿಸಿದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ವಿದ್ಯಾಸಾಗರ ಮಹಾರಾಜರು ಸಲ್ಲೇಖನ ವ್ರತ ಆಚರಣೆ ಮೂಲಕ ದೇಹತ್ಯಾಗ ಮಾಡಿದ್ದಾರೆ. ಲೌಖಿಕ ಜೀವನವನ್ನು ತ್ಯಾಗ ಮಾಡಿ ಮೇಲ್ಮಟ್ಟದ ಜೀವನ ನಡೆಸಿ ನಮ್ಮೆಲ್ಲರಿಗೂ ದಾರಿ ತೋರಿಸಿದ್ದಾರೆ. ನಾವೆಲ್ಲಾ ಆಸೆ, ಆಕಾಂಕ್ಷೆಗಳ ಜಂಜಾಟದ ಬದುಕಿನಲ್ಲಿ ಸಿಲುಕುತ್ತೇವೆ. ಅವುಗಳ ಹೊರತಾಗಿಯೂ ಜೀವನ ನಡೆಸಬಹುದು ಎಂದು ಅವರು ತೋರಿಸಿದ್ದಾರೆ. ಅವರ ಆಲೋಚನೆಗಳು ಅಮರವಾಗಿ ನಮ್ಮೊಂದಿಗೆ ಉಳಿಯಲಿದೆ ಎಂದು ಸ್ಮರಿಸಿದರು.
7
+ ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ವಿದ್ಯಾಸಾಗರ ಮಹಾರಾಜರ ಇಡೀ ಕುಟುಂಬ ಜೈನ ಪರಂಪ���ೆಗೆ ಸೇರಿದವರು. ನಮ್ಮ ದೇಶದಲ್ಲಿ ಋಷಿಮುನಿಗಳ ಪರಂಪರೆ ಇದೆ. ಧರ್ಮ, ಸಂಸ್ಕøತಿ ಉಳಿಸಲು ಅವರು ಮಾಡಿರುವ ಕಾರ್ಯ ಸ್ಮರಣೀಯ ಎಂದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಜೈನ ಧರ್ಮೀಯರು ಸಣ್ಣ ವಯಸ್ಸಿನಲ್ಲಿಯೇ ದೀಕ್ಷೆ ಪಡೆಯುತ್ತಾರೆ. ಐಷಾರಾಮಿ ಜೀವನವನ್ನು ತ್ಯಜಿಸಿ ಧರ್ಮದ ಹಾದಿಯಲ್ಲಿ ನಡೆಯುತ್ತಾರೆ. ಗೋವಿನ ರಕ್ಷಣೆ ಪವಿತ್ರವೆಂದು ಭಾವಿಸಿದ್ದಾರೆ. ನಂದಗಾವ್‍ನಲ್ಲಿ 3 ಸಾವಿರ ಎಕರೆಯಲ್ಲಿ ಒಂದೂವರೆ ಲಕ್ಷ ಗೋವುಗಳನ್ನು ಸಂರಕ್ಷಣೆ ಮಾಡಲಾಗಿದೆ. ದೇಶ ಹಾಗೂ ಸಮಾಜಕ್ಕೆ ಅವರು ಮಾಡಿದ ಸೇವೆ ಉತ್ತಮವಾದುದು ಎಂದು ಗುಣಗಾನ ಮಾಡಿದರು.
8
+ ರಾಜಕೀಯ ಮಾತುಕತೆ ಆರಂಭಿಸಿದ ಪವನ್‍ಕಲ್ಯಾಣ್
9
+ ಶಾಸಕ ಚನ್ನಬಸಪ್ಪ ಅವರು ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದರು. ಬಳಿಕ ಸದನದ ಸದಸ್ಯರೆಲ್ಲರೂ ಎದ್ದು ನಿಂತು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಸಂತಾಪ ಸೂಚಿಸಿದರು.
eesanje/url_46_232_7.txt ADDED
@@ -0,0 +1,6 @@
 
 
 
 
 
 
 
1
+ ನಂಬರ್​ ಪ್ಲೇಟ್ ಕುರಿತು​​ ಗುಡ್ ನ್ಯೂಸ್..!
2
+ ಬೆಂಗಳೂರು,ಫೆ.19- ಮಾರ್ಚ್ 3, 2019ರ ಬಳಿಕ ರಸ್ತೆಗೆ ಇಳಿಯುವ ಹೊಸ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸುವುದು ಕಡ್ಡಾಯವಾಗಿದೆ. ಇನ್ನು ಇದಕ್ಕೂ ಮುನ್ನ ನೋಂದಣಿಗೊಂಡ ವಾಹನಗಳಿಗೆ ಹೆಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಾರಿಗೆ ಇಲಾಖೆ 2024ರ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ಅವಧಿಯನ್ನೂ ವಿಸ್ತರಣೆ ಮಾಡಿದ್ದಾರೆ.
3
+ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.
4
+ ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ
5
+ ಏನಿದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ?ಈ ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ.
6
+ ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನhttps://... ಅಥವಾ .. ಭೇಟಿ ನೀಡಿ ಮತ್ತು ನ್ನು ಕ್ಲಿಕ್ ಮಾಡಿ.ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.ನಿಮ್ಮ ಅನುಕೂಲಕ್ಕೆ, ತಕ್ಕಂತೆ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್��ಳದಲ್ಲಿ ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
eesanje/url_46_232_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವಿಧಾನಸಭೆಯಲ್ಲಿ ಅಲ್ಪಸಂಖ್ಯಾತರರ ಅಭಿವೃದ್ಧಿ ಅನುದಾನ ಕುರಿತ ಬಿಸಿಬಿಸಿ ಚರ್ಚೆ
2
+ ಬೆಂಗಳೂರು,ಫೆ.19- ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕರು ಕೇಳಿದ ಪ್ರಶ್ನೆ ವಿಧಾನಸಭೆಯಲ್ಲಿಂದು ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಗಿ ಮಾತಿನ ಚಕಮಕಿ ನಡೆಯಿತು. ಪ್ರಶ್ನೋತ್ತರದ ಅವಧಿಯಲ್ಲಿ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ, ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಮಂಜೂರು ಮಾಡಿ ಬಿಡುಗಡೆ ಮಾಡಿದೆ ಎಂದು ಪ್ರಶ್ನೆ ಕೇಳಿ, ರೈತರ ಹಿತವನ್ನು ಕಡೆಗಣಿಸಿ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎಂದಿದ್ದರು. 1 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲೂ ಬಿಜೆಪಿ ಶಾಸಕರಿಗೆ ತಾರತಮ್ಯ ಮಾಡಲಾಗಿದೆ ಎಂದು ಆಕ್ಷೇಪಿಸಿದರು.
3
+ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹಮ್ಮದ್‍ಖಾನ್ ಉತ್ತರ ನೀಡಿ, ಅಲ್ಪಸಂಖ್ಯಾತರಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ. 1 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದರು. ಅದರಲ್ಲಿ 300 ಕೋಟಿ ರೂ.ಗಳ ಯೋಜನೆ ಸಿದ್ಧವಾಗಿದ್ದು, 165 ಕೋಟಿ ರೂ. ಮಾತ್ರ ಬಿಡುಗಡೆಯಾಗಿದೆ ಎಂದರು.
4
+ ವಿಜಯೇಂದ್ರರವರು ಆರೋಪಿಸುವಂತೆ ಅಲ್ಪಸಂಖ್ಯಾತರಿಗೆ ಸಾವಿರಾರು ಕೋಟಿ ರೂ.ಗಳನ್ನು ನೀಡಿಲ್ಲ. 3.71 ಲಕ್ಷ ಕೋಟಿ ಬಜೆಟ್‍ನಲ್ಲಿ 300 ಕೋಟಿ ರೂ. ಮಾತ್ರ ನೀಡಿದ್ದಾರೆ. ಅದು ಬಜೆಟ್ ಗಾತ್ರದ ಶೇ.1 ರಷ್ಟು ಪಾಲಿನಂಶವಾಗುವುದಿಲ್ಲ ಎಂದು ಹೇಳಿದರು. ಅಲ್ಪ ಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಪಕ್ಷಬೇಧ ಇಲ್ಲದೆ ಹಣ ನೀಡಿದ್ದೇವೆ. ಬಿಜೆಪಿಯ 29, ಜೆಡಿಎಸ್‍ನ 9 ಶಾಸಕರಿಗೂ ಹಣ ಒದಗಿಸಲಾಗಿದೆ. ಕಾಲೋನಿಗಳನ್ನು ಎ,ಬಿ,ಸಿ ಎಂದು ವರ್ಗೀಕರಿಸಿ ಅಲ್ಪಸಂಖ್ಯಾತರು ಹೆಚ್ಚಿರುವ ಕಾಲೋನಿಗಳಿಗೆ ಗರಿಷ್ಠ 5 ಕೋಟಿ ರೂ.ವರೆಗೂ ಹಣ ನೀಡಲಾಗುತ್ತಿದೆ. 94 ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಾಗಿದೆ ಎಂದು ವಿವರಿಸಿದರು.
5
+ ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ
6
+ ಈ ಸಂದರ್ಭದಲ್ಲಿ ಎದ್ದುನಿಂತ ಬಿಜಾಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನನ್ನ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ 1.20 ಲಕ್ಷ ಜನಸಂಖ್ಯೆ ಇದೆ. ಆದರೆ ನನಗೆ ಹಣವನ್ನೇ ಬಿಡುಗಡೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ತಿರುಗೇಟು ನೀಡಿದ ಜಮೀರ್ ಅಹಮ್ಮದ್ ಖಾನ್, ನೀವು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕೆಲಸ ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದೀರ. ಬುರ್ಖಾ, ಟೋಪಿ ಧರಿಸಿದವರು ನಮ್ಮ ಹತ್ತಿರ ಬರಬೇಡಿ ಎಂದು ಹೇಳಿಕೆ ನೀಡಿರುವುದನ್ನು ನೋಡಿದ್ದೇನೆ. ಕೆಲಸ ಮಾಡುವುದಾದರೆ ಪತ್ರ ಕೊಡಿ. 10 ಕೋಟಿ ರೂ. ಬೇಕಾದರೂ ಅನುದಾನ ಕೊಡುತ್ತೇನೆ ಎಂದರು.
7
+ ಇದು ಬಿಜೆಪಿ ಶಾಸಕರನ್ನು ಕೆಣಕಿತ್ತು. ಅಶೋಕ್, ನಾರಾಯಣ, ಅರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್ ಮತ್ತಿತರರು ಆಕ್ಷೇಪ ವ್ಯಕ್ತಪಡಿಸಿ, ಸಚಿವರು ಸರ್ಕಾರವಾಗಿ ಕೆಲಸ ಮಾಡಬೇಕು. ವೈಯಕ್ತಿಕವಾಗಿ ಅಥವಾ ರಾಜಕೀಯವಾಗಿ ನಡೆದುಕೊಳ್ಳಬಹುದು. ಹೇಳಿಕೆಗಳು ಏನೇ ಇರಲಿ, ಅಲ್ಪಸಂಖ್ಯಾತರ ಅಭಿವೃದ್ಧಿಯನ್ನು ಕಡೆಗಣಿಸುವುದು ಅವರಿಗೆ ಮಾಡಿದ ವಂಚನೆ ಎಂದು ಟೀಕಿಸಿದರು.
8
+ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ನಮ್ಮ ಸರ್ಕಾರ ಬಿಜೆಪಿಯ 28 ಶಾಸಕರ ಕ್ಷೇತ್ರಗಳಿಗೂ ಹಣ ನೀಡಿದೆ. ಆದರೆ ಹಿಂದಿನ ಸರ್ಕಾರ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಿತ್ತು ಎಂದು ಪ್ರತ್ಯುತ್ತರಿಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಮಧ್ಯಪ್ರವೇಶಿಸಿ, ಬಿಜಾಪುರ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಿದ್ದಾರೆ. ಸರ್ಕಾರ ಅವರ ಅಭಿವೃದ್ಧಿಯನ್ನು ಕಡೆಗಣಿಸುವುದು ಒಳ್ಳೆಯದಲ್ಲ ಎಂದು ಹೇಳಿದರು. ಈ ನಡುವೆ ಬಸನಗೌಡ ಯತ್ನಾಳ್ ಪದೇಪದೇ ಮಾತನಾಡುತ್ತಿದ್ದಾಗ, ನಾನು ನಿಮ್ಮ ಪರವಾಗಿ ಶುಲ್ಕ ಇಲ್ಲದೆ ವಕಾಲತ್ತು ಮಾಡುತ್ತಿದ್ದೇನೆ. ಸ್ವಲ್ಪ ಹೊತ್ತು ತಾಳ್ಮೆಯಿಂದ ಇರಿ ಎಂದು ತಮ್ಮ ಪಕ್ಷದ ಹಿರಿಯ ಶಾಸಕರಿಗೆ ಸಲಹೆ ನೀಡಿದರು.
9
+ ಚರ್ಚೆ ಮುಂದುವರೆಸಿದ ಬೊಮ್ಮಾಯಿಯವರು, ರಾಜಕೀಯವಾಗಿ ಮಾತನಾಡುವುದು ಬೇರೆ, ಅಭಿವೃದ್ಧಿ ಬೇರೆ ಬಿಜಾಪುರದಲ್ಲಿರುವ ಅಲ್ಪ ಸಂಖ್ಯಾತರ ಅಭಿವೃದ್ಧಿಯನ್ನು ಕಡೆಗಣಿಸುವುದು ಒಳ್ಳೆಯದಲ್ಲ. ಇನ್ನು ನನ್ನ ಕ್ಷೇತ್ರಕ್ಕೆ 5 ಕೋಟಿ ಕೊಟ್ಟಿರುವುದಾಗಿ ಹೇಳಿದ್ದೀರ. ಬೇರೆಯವರ ಪತ್ರದ ಮೇಲೆ ಹಣ ಕೊಟ್ಟರೆ, ಅಲ್ಲಿ ಯಾವ ಕೆಲಸಗಳಾಗುತ್ತವೆ ಎಂದು ನಮಗೆ ಗೊತ್ತಿರುತ್ತದೆ ಎಂದು ಎಚ್ಚರಿಸಿದರು.
10
+ ರಾಜಕೀಯ ಮಾತುಕತೆ ಆರಂಭಿಸಿದ ಪವನ್‍ಕಲ್ಯಾಣ್
11
+ ಯತ್ನಾಳ್‍ರವರ ಆಕ್ಷೇಪಾರ್ಹ ಟೀಕೆಗಳಿಗೆ ಮುಖ್ಯಮಂತ್ರಿಯಾಗಿದ್ದ ನೀವು ಆ ವೇಳೆಯೇ ತಿಳಿ ಹೇಳಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಜಮೀರ್ ಅಹಮ್ಮದ್ ಖಾನ್‍ರವರು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದರು. ಯತ್ನಾಳ್‍ರವರು ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ, ಜೈನರು, ಬೌದ್ಧರು ಸೇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಬಿ.ವೈ.ವಿಜಯೇಂದ್ರರವರು ಸರ್ಕಾರ ದಿವಾಳಿಯಾಗಿದೆ. ಅದಕ್ಕಾಗಿ ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
eesanje/url_46_232_9.txt ADDED
@@ -0,0 +1,5 @@
 
 
 
 
 
 
1
+ ಒಂದು ಲಕ್ಷ ವಸತಿ ಯೋಜನೆ ಯಶಸ್ವಿಗೊಳಿಸಲುವ ಭರವಸೆ
2
+ ಬೆಂಗಳೂರು,ಫೆ.19- ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆಯನ್ನು ಯಶಸ್ವಿಗೊಳಿಸಲು, ಅಗತ್ಯ ಸಹಕಾರ ಕೊಡಿಸಲು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ವಿಧಾನಸೌಧದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಸರ್ಕಾರವೇ ರೂಪಿಸಿದ್ದ ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆ ವಿಳಂಬವಾಗುತ್ತಿದೆ. ಮನೆ ನಿರ್ಮಾಣದ ವೆಚ್ಚ ಐದಾರು ಲಕ್ಷದಿಂದ 12-13 ಲಕ್ಷಗಳಿಗೆ ಹೆಚ್ಚಾಗಿರುವುದು ಇದಕ್ಕೆ ಕಾರಣ ಎಂದು ಹೇಳಿದರು.
3
+ ಈ ಹಿಂದೆ ಬೆಂಗಳೂರಿನ ಶಾಸಕರು ಬಡವರಿಗೆ ಮನೆ ನಿರ್ಮಿಸಿಕೊಡಲು ಯೋಜನೆ ರೂಪಿಸುವಂತೆ 2015-16 ರಲ್ಲಿ ಆಗಲೂ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದೆವು. ಅದರ ಪರಿಣಾಮ ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆ ಅನುಷ್ಠಾನಕ್ಕೆ ಬಂದಿತ್ತು. ಆ ವೇಳೆ ಮನೆ ನಿರ್ಮಾಣದ ವೆಚ್ಚ 5 ಲಕ್ಷ ರೂ. ಇತ್ತು. ಸ್ಟಾಂಪ್ ಡ್ಯೂಟಿ, ಜಿಎಸ್‍ಟಿ ಸೇರಿದಂತೆ ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮನೆ ನಿರ್ಮಾಣವೂ ದುಬಾರಿಯಾಗಿದೆ. ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ವಿವರಿಸಿದರು.
4
+ ಅತ್ಯಾಚಾರ ಸಂತ್ರಸ್ಥೆಗೆ ಲೈಂಗಿಕ ಕಿರುಕುಳ ನೀಡಿದ ಮ್ಯಾಜಿಸ್ಟ್ರೇಟ್
5
+ ಮುಖ್ಯಮಂತ್ರಿಯವರ ಹೊಸ ಯೋಜನೆಗೆ ಅರ್ಜಿ ಸಲ್ಲಿಸಿರುವವರು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿಕೊಡುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಯೋಜನೆಗೆ ಅಗತ್ಯ ಆರ್ಥಿಕ ನೆರವು ನೀಡುವಂತೆ ಬೆಂಗಳೂರಿನ ಶಾಸಕರು ಒಟ್ಟಾಗಿ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
eesanje/url_46_233_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ನಾಳೆಯಿಂದ ವಿಧಾನಮಂಡಲದಲ್ಲಿ ಬಜೆಟ್ ಫೈಟ್
2
+ ಬೆಂಗಳೂರು,ಫೆ.18- ಲೋಕಸಭಾ ಚುನಾವಣೆಯ ತಯಾರಿಯಲ್ಲಿರುವ ರಾಜಕೀಯ ಪಕ್ಷಗಳು ನಾಳೆಯಿಂದ ವಿಧಾನಮಂಡಲದಲ್ಲಿ ಆರಂಭವಾಗುವ ಬಜೆಟ್ ಮೇಲಿನ ಚರ್ಚೆಯಲ್ಲಿ ಹಣಾಹಣಿಯ ವಾಕ್ಸಮರಕ್ಕೆ ಸಜ್ಜುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಬಜೆಟ್‍ನಲ್ಲಿ 55 ಸಾವಿರ ಕೋಟಿ ಬಂಡವಾಳ ವೆಚ್ಚ ಹಾಗೂ ಪಂಚಖಾತ್ರಿ ಯೋಜನೆಗೆ 52 ಸಾವಿರ ಕೋಟಿ ಹಣ ನಿಗದಿ ಮಾಡಿದ್ದಾರೆ.
3
+ ಜೊತೆಗೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ ಸಾಲದ ಪ್ರಮಾಣ 1 ಲಕ್ಷ ಕೋಟಿ ರೂ. ದಾಟಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ವಿರೋಧ ಪಕ್ಷಗಳು ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಯಾರಿ ನಡೆಸಿದರೆ, ಇದಕ್ಕೆ ಪ್ರತಿಯಾಗಿ ಹಿಂದಿನ ಸರ್ಕಾರಗಳು ಮಾಡಿದ್ದ ಸಾಲದ ಪ್ರಮಾಣವನ್ನು ಲೆಕ್ಕ ಹಾಕಿಟ್ಟುಕೊಂಡು ಸಿದ್ದರಾಮಯ್ಯ ತಿರುಗೇಟು ನೀಡಲು ಸಜ್ಜುಗೊಂಡಿದ್ದಾರೆ.
4
+ 2024-25ನೇ ಸಾಲಿನಲ್ಲಿ 1.05 ಲಕ್ಷ ಕೋಟಿ ಸಾಲ ಪಡೆಯಲಾಗುತ್ತಿದೆ. ಆದರೆ ಇದನ್ನು ಸರಿಯಾದ ಮಾರ್ಗದಲ್ಲೇ ಉಪಯೋಗಿಸಲಾಗುತ್ತಿದೆ. ಬಂಡವಾಳ ವೆಚ್ಚ ಮತ್ತು ಪಂಚಖಾತ್ರಿಗಳಿಗೆ 1.07 ಲಕ್ಷ ಕೋಟಿ ವೆಚ್ಚವಾಗುತ್ತಿದೆ. ಈ ಎರಡೂ ಬಾಬ್ತುಗಳು ಒಂದು ಆಸ್ತಿ ಸೃಜನೆಯಾಗಿದ್ದರೆ, ಮತ್ತೊಂದು ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವ ಮಹತ್ವಾಕಾಂಕ್ಷೆಯುಳ್ಳದ್ದಾಗಿದೆ ಎಂದು ಕಾಂಗ್ರೆಸ್ ಸಮರ್ಥಿಸಿಕೊಳ್ಳಲು ಮುಂದಾಗಿದೆ.
5
+ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿಯವರು ಕೇಂದ್ರ ಸರ್ಕಾರದ ಆರ್ಥಿಕ ತಾರತಮ್ಯದ ಬಗ್ಗೆ ಹಾಗೂ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಸಹಕಾರದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಬಜೆಟ್ ಮಂಡನೆಯಲ್ಲಿ ಹನ್ನೊಂದನೇ ಪುಟ ಓದುವ ವೇಳೆಗೆ ಜೆಡಿಎಸ್ ಮತ್ತು ಬಿಜೆಪಿ ಕಲಾಪವನ್ನು ಬಹಿಷ್ಕರಿಸಿ ಹೊರ ನಡೆದಿದ್ದವು. ಕೇಂದ್ರ ಸರ್ಕಾರವನ್ನು ಟೀಕಿಸಿದ್ದು ವಿರೋಧಪಕ್ಷಗಳಿಗೆ ಸಹಿಸಲಾಸಾಧ್ಯವಾಗಿತ್ತು. ಬಜೆಟ್‍ನಲ್ಲಿ ಏನೂ ಇಲ್ಲ ಎಂದು ಟ್ರೋಲಿಂಗ್ ಹಾಡು ಹಾಡಿ ಲೇವಡಿ ಮಾಡಿವೆ. ಇದಕ್ಕೆ ಮುಖ್ಯಮಂತ್ರಿಯವರು ವಿಪಕ್ಷಗಳ ತಲೆಯಲ್ಲಿ ಏನೂ ಇಲ್ಲ ಎಂದು ತಿರುಗೇಟು ನೀಡಿಯೂ ಆಗಿದೆ.
6
+ ನಂತರ ಬಜೆಟ್‍ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಹಣ ನೀಡಲಾಗಿದೆ. ಹಿಂದೂಗಳನ್ನು ಕಡೆಗಣಿಸಲಾಗಿದೆ ಎಂಬ ಪ್ರಚಾರವನ್ನು ವಿಪಕ್ಷಗಳು ವ್ಯಾಪಕವಾಗಿ ಬಿಂಬಿಸಿವೆ. ಇದಕ್ಕೆ ಕಾಂಗ್ರೆಸ್ ಎಷ್ಟೇ ಸಮರ್ಥನೆ ನೀಡಿದರೂ ಜನರ ಮನಸ್ಸಿನಲ್ಲಿರುವ ಅನುಮಾನ ನಿವಾರಣೆಯಾಗುವ ಸನ್ನಿವೇಶಗಳು ಕಂಡುಬರುತ್ತಿಲ್ಲ. ಮುಖ್ಯಮಂತ್ರಿಯವರು 15 ಬಜೆಟ್ ಮಂಡಿಸಿದ ಅನುಭವದ ಆಧಾರದ ಮೇಲೆ ವಿಪಕ್ಷಗಳ ಟೀಕೆ ಹಾಗೂ ಅಪಪ್ರಚಾರವನ್ನು ಹೇಗೆ ನಿಭಾಯಿಸುತ್ತಾರೆಂಬುದು ಕುತೂಹಲ ಕೆರಳಿಸಿದೆ.
7
+ ಲೋಕಸಭೆ ಚುನಾವಣೆ ಸಮೀಪ ಇರುವುದರಿಂದ ಕಾಂ���್ರೆಸ್ ಪಕ್ಷವನ್ನು ಹಿಂದೂ ವಿರೋ ಎಂದು ಹಣೆಪಟ್ಟಿ ಕಟ್ಟಲು ಬಿಜೆಪಿ ಮತ್ತು ಜೆಡಿಎಸ್ ಹರಸಾಹಸ ನಡೆಸುತ್ತಿವೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಹಿಂದಿನ ಬಾರಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರಿಂದ ರಾಜ್ಯಕ್ಕೆ ಯಾವುದೇ ಲಾಭವಾಗಿಲ್ಲ. ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ನಿರಂತರ ತಾರತಮ್ಯವಾಗುತ್ತಿದೆ ಎಂಬ ಭಾವನೆ ದೃಢೀಕರಿಸಲು ಯತ್ನಿಸುತ್ತಿದೆ.
8
+ ಈ ಜಿದ್ದಾಜಿದ್ದಿ ನಡುವೆ ಬಜೆಟ್‍ನ ಲೋಪದೋಷಗಳ ಬಗ್ಗೆಯೂ ಸಾಕಷ್ಟು ವಿಮರ್ಶೆ ನಡೆಯುವ ಸಾಧ್ಯತೆಯಿದೆ. ಲೋಕಸಭೆ ಚುನಾವಣೆಯ ಪೂರ್ವ ತಾಲೀಮಾಗಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿನ್ನೆ ದೆಹಲಿಯಲ್ಲಿ ನಡೆದಿದೆ.ದೇಶಾದ್ಯಂತ 3 ಸಾವಿರಕ್ಕೂ ಹೆಚ್ಚು ಜನಪ್ರತಿನಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಹೈಕಮಾಂಡ್ ನಾಯಕರು ವಿಪಕ್ಷಗಳನ್ನು ಮಣಿಸಲು ಅನುಸರಿಸಿದ ಕಾರ್ಯತಂತ್ರಗಳ ಬಗ್ಗೆ ಕೇಸರಿ ಕಲಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
9
+ ವರಿಷ್ಠರು ನೀಡುವ ಪಾಶುಪತಾಸ್ತ್ರಗಳೊಂದಿಗೆ ಆಗಮಿಸಿರುವ ಬಿಜೆಪಿಯ ಶಾಸಕರು, ಪ್ರಮುಖ ನಾಯಕರು ನಾಳೆ ವಿಧಾನಮಂಡಲದಲ್ಲಿ ರಣೋತ್ಸಾಹ ಪ್ರದರ್ಶಿಸುವ ಸಾಧ್ಯತೆಯಿದೆ. ಇತ್ತ ಕಾಂಗ್ರೆಸ್ ಕೂಡ ನಿನ್ನೆ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಮಾವೇಶ ನಡೆಸಿ, ಲೋಕಸಭೆಯ ಪೂರ್ವ ತಯಾರಿಗೆ ರಣಕಹಳೆ ಊದಿದೆ. ಅದೇ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್‍ನ ನಾಯಕರು ಬಿಜೆಪಿಗೆ ಠಕ್ಕರ್ ನೀಡಲು ಸಜ್ಜುಗೊಂಡಿದ್ದಾರೆ. ಈಗಾಗಲೇ ಶಾಸಕಾಂಗ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಯ ಟೀಕೆ, ವಾಗ್ದಾಳಿಗೆ ಪ್ರತ್ಯುತ್ತರಿಸಲು ಒಂದು ಪಡೆಯನ್ನೇ ಸಜ್ಜುಗೊಳಿಸಿದ್ದಾರೆ.
10
+ ಬೆಳಗಾವಿ ಅಧಿವೇಶನದಲ್ಲಿ ಪ್ರತಿ ಹಂತದಲ್ಲೂ ಶಾಸಕರ ಅನಗತ್ಯ ಚರ್ಚೆಗಳಿಗೆ ಬ್ರೇಕ್ ಹಾಕುತ್ತಿದ್ದ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಬೆಂಗಳೂರಿನ ಕಲಾಪದಲ್ಲಿ ಉದಾರಿಯಾದಂತೆ ಕಂಡುಬಂದಿದೆ. ಗುರುವಾರ ಮಂಗಳೂರಿನ ಸೆಂಟ್ ಥೆರೇಸಾ ಶಾಲೆಯ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಗದ್ದಲ ಎಬ್ಬಿಸುವ ಪ್ರಯತ್ನ ನಡೆಸಿತ್ತು. ಅದಕ್ಕೆ ಕಾಂಗ್ರೆಸ್ ಕೂಡ ಸಿದ್ಧವಾಗಿಯೇ ಪ್ರತಿ ವಾಗ್ದಾಳಿ ನಡೆಸಿದ್ದು ಕಂಡುಬಂದಿತ್ತು. ಆ ವಿಚಾರವನ್ನು ಬಿಜೆಪಿ ಕೈ ಬಿಟ್ಟಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
11
+ ಮೊನ್ನೆ ಬಜೆಟ್ ಅಧಿವೇಶನ ಇದ್ದಿದ್ದರಿಂದಾಗಿ ಬಿಜೆಪಿ ಸಭಾತ್ಯಾಗ ಮಾಡಿ, ಮಂಗಳೂರಿನ ವಿಚಾರವನ್ನು ಅರ್ಧಕ್ಕೆ ನಿಲ್ಲಿಸಿದಂತೆ ಕಂಡುಬರುತ್ತಿದೆ. ರಾಜ್ಯದ ಬರ, ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ ಸೃಷ್ಟಿಯ ಲೋಪಗಳು, ಕೈಗಾರಿಕೆ ಹಿನ್ನಡೆ, ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆ, ಬೆಲೆ ಏರಿಕೆ, ವಿದ್ಯುತ್ ಕೊರತೆ, ಕೃಷಿ ಉತ್ಪನ್ನಗಳ ಬೆಲೆ ಕುಸಿತ ಸೇರಿದಂತೆ ಹಲವಾರು ಮಹತ್ವದ ವಿಚಾರಗಳಿವೆ. ಆದರೆ ಚುನಾವಣೆಯ ಕಾರಣಕ್ಕಾಗಿ ಭಾವನಾತ್ಮಕ ವಿಚಾರಗಳಿಗೆ ��ೆಚ್ಚಿನ ಆದ್ಯತೆ ದೊರೆಯುವ ಸಾಧ್ಯತೆಯಿದ್ದು, ಮುಂದಿನ 5 ದಿನಗಳ ಕಾಲ ಕಲಾಪ ರಂಗೇರುವ ನಿರೀಕ್ಷೆಗಳಿವೆ.
eesanje/url_46_233_10.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರಿಗೆ ಬಂದ ಬ್ರೆಜಿಲ್ ಪ್ರಜೆ ದೇಹದೊಳಗಿತ್ತು 9.2 ಕೋಟಿ ರೂ. ಮೌಲ್ಯದ ಕೊಕೈನ್
2
+ ಬೆಂಗಳೂರು,ಫೆ.17- ದೇಹದೊಳಗೆ ಕೊಕೈನ್ ಮರೆಮಾಚಿಕೊಂಡು ನಗರಕ್ಕೆ ಬಂದಿದ್ದ ಬ್ರೆಜಿಲ್ ಪ್ರಜೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಡಿಆರ್‍ಐ ಅಧಿಕಾರಿಗಳು ಬಂಧಿಸಿ 9.2 ಕೋಟಿ ಮೌಲ್ಯದ ಕ್ಯಾಪ್ಸುಲ್‍ನ್ನು ಹೊರತೆಗೆಸಿದ್ದಾರೆ. ಬ್ರೆಜಿಲ್ ದೇಶದ ಪ್ರಜೆ ವೆನೆಜುವೆಲಾದಿಂದ ದುಬೈಗೆ ಹೋಗಿ ಅಲ್ಲಿಂದ ವಿಮಾನದಲ್ಲಿ ನಗರಕ್ಕೆ ಬಂದಿದ್ದಾನೆ.
3
+ ವಿಮಾನ ನಿಲ್ದಾಣದಲ್ಲಿ ಡಿಆರ್‍ಐ ಅಧಿಕಾರಿಗಳು ಈ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಅನುಮಾನ ಬಂದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್ ಮಾಡಿಸಿದಾಗ ಆತನ ದೇಹದೊಳಗೆ 920 ಗ್ರಾಂ ನಾರ್ಕೋಟಿಕ ಕ್ಯಾಪ್ಸುಲ್‍ಗಳು ಪತ್ತೆಯಾಗಿವೆ. ಆರೋಪಿಯು ದೇಹದೊಳಗೆ ಮರೆಮಾಚಿಕೊಂಡು ಅಕ್ರಮವಾಗಿ ನಿಕೋಟಿನ್ ಅಂಶವಿದ್ದ ಕ್ಯಾಪ್ಸುಲ್‍ಗಳನ್ನು ಸಾಗಾಟಕ್ಕೆ ಯತ್ನಿಸಿರುವುದು ಗೊತ್ತಾಗಿದೆ.
4
+ ಮೋದಿ ಸರ್ಕಾರ ದೇಶದ ರೈತರಿಗೆ ಶಾಪವಾಗಿದೆ : ಖರ್ಗೆ
5
+ ವೈದ್ಯರು ಆತನ ದೇಹದಲ್ಲಿದ್ದ ಕ್ಯಾಪ್ಸುಲ್‍ಗಳನ್ನು ಹೊರತೆಗೆದಿದ್ದು, ಅವುಗಳ ಮೌಲ್ಯ 9.2 ಕೋಟಿ ರೂ.ಗಳೆಂದು ಅಂದಾಜಸಲಾಗಿದೆ. ಡಿಆರ್‍ಐ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.
eesanje/url_46_233_11.txt ADDED
@@ -0,0 +1,8 @@
 
 
 
 
 
 
 
 
 
1
+ ಸುಂದರ, ಸ್ವಚ್ಛ ನಗರಕ್ಕಾಗಿ ಬ್ರ್ಯಾಂಡ್ ಬೆಂಗಳೂರು ಪ್ರಯಾಣ ಆರಂಭ ಆರಂಭಿಸಿದ್ದೇವೆ : ಸಿಎಂ
2
+ ಬೆಂಗಳೂರು,ಫೆ.17- ಸುಂದರ, ಹಸಿರು ಮತ್ತು ಸ್ವಚ್ಛ ನಗರಕ್ಕಾಗಿ ಬ್ರ್ಯಾಂಡ್ ಬೆಂಗಳೂರು ಪ್ರಯಾಣವನ್ನು ತಮ್ಮ ಸರ್ಕಾರ ಈಗಾಗಲೇ ಆರಂಭಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಿ ಪ್ರಿಂಟರ್ಸ್ (ಮೈಸೂರು) ಆಯೋಜಿಸಿದ್ದ ಬೆಂಗಳೂರು 2040 ವಿಷನ್‍ನ 3ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಮ್ಮೆಲ್ಲರ ಹೆಮ್ಮೆಯ ನಗರ. ಜಾಗತಿಕವಾಗಿ ತಾಂತ್ರಿಕತೆಯಿಂದ ಉನ್ನತ ಸ್ಥಾನದಲ್ಲಿದೆ.
3
+ ಇಲ್ಲಿಗೆ ನಾವು ಬಹುಮುಖ್ಯವಾದ ಆದ್ಯತೆ ನೀಡಬೇಕಿದೆ. ಅಭಿವೃದ್ಧಿಗೆ ಒತ್ತು ನೀಡುವ ಜೊತೆಗೆ ಸಂಶೋಧನೆ, ವೈವಿಧ್ಯತೆ, ಪ್ರಗತಿಗೆ ಬೆಂಬಲವಾಗಿರಬೇಕು ಎಂದು ಹೇಳಿದರು. ಬೆಂಗಳೂರಿನ ಮೂಲಸೌಲಭ್ಯ, ಜೀವನ ಗುಣಮಟ್ಟ, ನಾಗರಿಕ ಸೌಲಭ್ಯಗಳಲ್ಲಿರುವ ಸವಾಲುಗಳನ್ನು ನಿಭಾಯಿಸಿ ಅಂತಾರಾಷ್ಟ್ರೀಯ ಗುಣಮಟ್ಟ ಕಾಯ್ದುಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದ ಆರ್ಥಿಕ ಮುಂಚೂಣಿಯಾಗಿರುವ ಮಹಾನಗರಿ ಈಗ ಜಾಗತಿಕವಾಗಿ ಆರ್ಥಿಕ ಶಕ್ತಿ ಮನೆಯಾಗಿದೆ. ಅದಕ್ಕಾಗಿ ಉತ್ಕøಷ್ಠ ದರ್ಜೆಯ ಮೂಲಸೌಲಭ್ಯ ಕಲ್ಪಿಸುವುದು ಅನಿವಾರ್ಯ ಎಂದು ಹೇಳಿದರು.
4
+ ಬೆಂಗಳೂರಿನ ಸಂಚಾರದ ಸಮಸ್ಯೆಯ ಬಗ್ಗೆ ಎಲ್ಲರಿಗೂ ಅರಿವಿದೆ. ಇದನ್ನು ಸರಿಪಡಿಸಲು ಬಹು ಆಯಾಮಗಳಡಿ ಶ್ರಮರಹಿತವಾಗಿ ಕೆಲಸ ಮಾಡುತ್ತಿದ್ದೇವೆ. ನಿನ್ನೆ ಮಂಡಿಸಲಾದ ರಾಜ್ಯಸರ್ಕಾರದ ಆಯವ್ಯಯದಲ್ಲಿ ಬೆಂಗಳೂರಿನ ಗಂಭೀರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಮೆಟ್ರೋ ಮಾರ್ಗಗಳು, ರಸ್ತೆಗಳು, ಸುಲಲಿತ ಸಂಚಾರ ವ್ಯವಸ್ಥೆ, ಕೈಗೆಟಕುವ ವೈದ್ಯಕೀಯ ಸೇವೆ, ಶಿಕ್ಷಣ, ವಸತಿ ಹಾಗೂ ನಗರ ಪ್ರದೇಶದ ಬಡಜನರ ಅಗತ್ಯತೆಗಳನ್ನು ಪರಿಹರಿಸಲು ಒತ್ತು ನೀಡಲಾಗಿದೆ ಎಂದರು.
5
+ ಕಾನೂನು ಸುವ್ಯವಸ್ಥೆಯನ್ನು ಸುಸ್ಥಿತಿಯಲ್ಲಿಟ್ಟು ಶಾಂತಿ ಪಾಲನೆ ಮಾಡಲಾಗುತ್ತಿದೆ. ಸುರಕ್ಷತೆಯ ಖಾತ್ರಿ ನಮ್ಮ ಆದ್ಯತೆ. ಪ್ರತಿಯೊಬ್ಬ ನಾಗರಿಕನಿಗೂ ಸಮಗ್ರ ಹಾಗೂ ಉತ್ತಮ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತೇವೆ ಎಂದಿದ್ದಾರೆ.ಬೆಂಗಳೂರಿನ ಹೊರವಲಯದ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ, ಬಿಡದಿ ಉಪನಗರಗಳನ್ನು ಅಭಿವೃದ್ಧಿಪಡಿಸಿ ಸಂಪರ್ಕ ವ್ಯವಸ್ಥೆಯನ್ನು ಉತ್ತಮಗೊಳಿಸಲಾಗುವುದು. ಸಾರ್ವಜನಿಕ ಆರೋಗ್ಯ ನಮ್ಮ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸಾಕಷ್ಟು ಅನುದಾನ ಒದಗಿಸಲಾಗಿದೆ. ಇಂದಿರಾ ಕ್ಯಾಂಟೀನ್‍ಗಳು ನಗರ ಪ್ರದೇಶದ ಬಡವರಿಗೆ ಅನುಕೂಲವಾಗಿದೆ ಎಂದು ಹೇಳಿದರು.
6
+ ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಸಹಕರಿಸಿದೆ : ಪ್ರಹ್ಲಾದ್ ಜೋಶಿ
7
+ ವಸತಿ ಯೋಜನೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದೇವೆ. ಆಸ್ತಿಗಳ ಪರಭಾರೆಯ ಮೂಲಕ ಬಡವರ ಮನೆಗಳ ನಿರ್ಮಾಣಕ್ಕೆ ಆರ್ಥಿಕ ಸಂಪನ್ಮೂಲ ಕ್ರೂಢೀಕರಣದ ಅವಕಾಶಗಳ ಬಗ್ಗೆ ಚಿಂತನೆ ನಡೆಸಲಾಗಿದೆ. ��ೆಂಗಳೂರಿನ ಅಭಿವೃದ್ಧಿಗೆ ಕಾರ್ಪರೇಟ್ ಸಂಸ್ಥೆಗಳು ಹಾಗೂ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.
8
+ ಮಣಿಪಾಲ್ ಆಸ್ಪತ್ರೆಯ ಡಾ.ಸುದರ್ಶನ್ ಬಲ್ಲಾಳ್, ದಿ ಪ್ರಿಂಟರ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ತಿಲಕ್‍ಕುಮಾರ್, ನಿರ್ದೇಶಕರಾದ ಕೆ.ಎನ್.ಶಾಂತಕುಮಾರ್, ಡೆಕ್ಕನ್ ಹೆರಾಲ್ಡ್‍ನ ಸೀತಾರಾಮನ್ ಶಂಕರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
eesanje/url_46_233_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಜನ ಬದಲಾವಣೆ ಮಾಡಲಿದ್ದಾರೆ : ಡಿಸಿಎಂ
2
+ ಮಂಗಳೂರು, ಫೆ.17- ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
3
+ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ, ಅಸಾಧ್ಯ ಎಂಬುದಿಲ್ಲ. ರಾಜಕಾರಣ ಎಂದರೆ ಸಾಧ್ಯತೆಗಳ ಕಲೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನ ಇಲ್ಲಿ ಬದಲಾವಣೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ. ಈ ಭಾಗದಲ್ಲಿ ನಿರುದ್ಯೋಗದ ಸಮಸ್ಯೆ ಇದೆ. ಇಲ್ಲಿ ಪಾಸಾಗುವ ಯುವಕರು ಮತ್ತು ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೆಂಗಳೂರು, ಮುಂಬೈ, ಸೌದಿಗೆ ಹೋಗುತ್ತಿದ್ದು, ಈ ಭಾಗದಲ್ಲಿ ಶಾಂತಿ ಕದಡಲಾಗುತ್ತಿದೆ ಎಂದರು.
4
+ ಈ ಭಾಗದಲ್ಲಿ ಅನೇಕ ಮೆಡಿಕಲ, ಇಂಜಿನಿಯರ್ ಕಾಲೇಜುಗಳಿವೆ. ಅನೇಕ ಮಕ್ಕಳು ಇಲ್ಲಿ ಬಿಜೆಪಿಯ ಧರ್ಮದ ಬಲೆಗೆ ಬಿದ್ದು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ಬಿಜೆಪಿ ಅಭಿವೃದ್ಧಿ ವಿಚಾರ ಬಿಟ್ಟು ಭಾವನಾತ್ಮಕ ವಿಚಾರವನ್ನು ಮುಂದಿಡುತ್ತಿದೆ. ಅದಕ್ಕಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ಹೊಸ ಆಲೋಚನೆ ಮಾಡುವುದಾಗಿ ಹೇಳಿದ್ದೆವು. ನಿನ್ನೆಯ ಬಜೆಟ್‍ನಲ್ಲೂ ಮೀನುಗಾರರು ಹಾಗೂ ಕರಾವಳಿ ಭಾಗದಲ್ಲಿ ಹೊಸ ನೀತಿ ತರಲು ಘೋಷಣೆ ಮಾಡಿದ್ದೇವೆ. ಈ ವಿಚಾರವಾಗಿ ಸಲಹೆ ಕೇಳಲಾಗಿದೆ. ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಬೇಕಾಗಿದೆ. ಸಂಜೆ 7 ಗಂಟೆ ನಂತರ ಈ ಭಾಗದ ಪ್ರದೇಶದಲ್ಲಿ ಜನ ಓಡಾಟ ಕಡಿಮೆ ಮಾಡಿದ್ದಾರೆ. ವ್ಯಾಪಾರ ವಹಿವಾಟು ಕುಂಠಿತವಾಗಿದೆ. ವ್ಯಾಪಾರ ವಹಿವಾಟು ಆದಾಗಲೇ ಜನಕ್ಕೆ ಉದ್ಯೋಗ ಸಿಗುತ್ತದೆ ಎಂದು ಹೇಳಿದರು.
5
+ ನಾಯಕತ್ವದ ಬದಲಾವಣೆ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ : ಡಿ.ಕೆ.ಸುರೇಶ್
6
+ ದೇವಾಲಯಗಳಲ್ಲಿ ಇರುವ ಭಕ್ತಿ ವ್ಯಾಪಾರ ವಹಿವಾಟಿನಲ್ಲೂ ಇರಬೇಕು. ಇನ್ನು ಈ ಭಾಗದ ಬ್ಯಾಂಕುಗಳನ್ನು ಉತ್ತರ ಭಾರತದ ಬ್ಯಾಂಕುಗಳ ಜತೆ ವಿಲೀನ ಮಾಡಲಾಗುತ್ತಿದೆ. ಇಲ್ಲದರ ಬಗ್ಗೆ ನಾವು ಗಂಭೀರವಾಗಿ ಗಮನ ಹರಿಸಬೇಕು ಎಂದರು.
7
+ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡಲ್ಲ :ಜೊರೋಸಾ ಶಾಲೆ ವಿವಾದದಲ್ಲಿ ಶಾಸಕರ ವಿರುದ್ಧದ ಪ್ರಕರಣ ಹಿಂಪಡೆಯದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಮಾಡುತ್ತಿರಲಿ. ಕಾನೂನಿನ ಪ್ರಕಾರ ಕ್ರಮ ವಹಿಸಲಾಗುತ್ತದೆ. ಪೊಲೀಸರು ಅವರ ಕೆಲಸ ಮಾಡುತ್ತಾರೆ. ನಾನು ಅವರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.
8
+ ಮುಸಲ್ಮಾನರಿಗೆ ಶೇ.1ರಷ್ಟು ಅನುದಾನ ನೀಡಬಾರದೇ? :ದಕ್ಷಿಣ ಕನ್ನಡ ಭಾಗದ ತೆರಿಗೆ ನಮಗೆ ಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಕೇಳಿದಾಗ ಅವರು ಧ್ವನಿ ಎತ್ತಲಿಲ್ಲ. ನಾವು ಮುಸಲ್ಮಾನರಿಗೆ ಕೊಟ್ಟಿದ್ದೇವೆ. 3.71 ಲಕ್ಷ ಕೋಟಿಯಲ್ಲಿ 3 ಸಾವಿರ ಕೋಟಿ ಶಾಲೆಗಳು ಹಾಗೂ ಇತರೆ ಅಭಿವೃದ್ಧಿಗೆ ನೀಡಿದ್ದೇವೆ. ಬಜೆಟ್ ನಲ್ಲಿ ಶೇ.1 ರಷ್ಟು ಅನುದಾನ ನೀಡಬಾರದೇ? ಬಿಜೆಪಿಯವರು ರಾಜಕಾರಣ ಮಾಡುವುದಕ್ಕೆ ಈ ರೀತಿ ಹೇಳುತ್ತಾರೆ ಎಂದರು.
9
+ ಸುರೇಶ್ ವಿರುದ್ಧ ಕುಮಾರಸ್ವಾಮಿ ನಿಂತರೂ ಸ್ವಾಗತ:ಡಿ.ಕೆ ಸುರೇಶ್ ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಅವರನ್ನು ನಿಲ್ಲಿಸಲು ಚರ್ಚೆ ನಡೆಯುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿದ್ದೆ. ಕುಮಾರಸ್ವಾಮಿ ಅವರ ವಿರುದ್ಧ ಸ್ರ್ಪಧಿಸಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಕುಮಾರಸ್ವಾಮಿ ಅವರ ಧರ್ಮಪತ್ನಿ ಅವರನ್ನು ನಿಲ್ಲಿಸಿದಾಗ ಅವರ ವಿರುದ್ಧ ನನ್ನ ತಮ್ಮ ಸ್ಪರ್ಧೆ ಮಾಡಿದ್ದರು. ಆಗಲೂ 1.35 ಲಕ್ಷ ಮತಗಳಿಂದ ಗೆದ್ದಿದ್ದೆವು. ಅವರು ಯಾರನ್ನಾದರೂ ನಿಲ್ಲಿಸಲಿ. ನಮಗೆ ನಮ್ಮ ಮತದಾರರಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
10
+ ಸುರೇಶ್ ಅವರು ದೆಹಲಿಯಲ್ಲಿ ಕೂರುವ ಸಂಸದರಲ್ಲ. ಅವರು ಹಳ್ಳಿಯಲ್ಲಿ ಕೂರುವ ಸಂಸದರು. ಅವರು ಮತದಾರರ ಮನಸ್ಸಿನಲ್ಲಿ ಉತ್ತಮ ಕೆಲಸಗಾರ ಎಂಬ ಭಾವನೆ ಮೂಡಿಸಿದ್ದಾರೆ. ನಮ್ಮ ಕ್ಷೇತ್ರದಿಂದ ದೇವೇಗೌಡರು, ಕುಮಾರಸ್ವಾಮಿ ಅವರೂ ಸೇರಿದಂತೆ ಅನೇಕ ಬೇರೆ ಸಂಸದರೂ ಆಯ್ಕೆಯಾಗಿದ್ದರು. ಅವರಿಗೂ, ಸುರೇಶ್‍ಗೂ ಏನು ವ್ಯತ್ಯಾಸವಿದೆ ಎಂದು ಜನ ನೋಡಿದ್ದಾರೆ. ಪ್ರತಿ ಹಳ್ಳಿ, ಪ್ರತಿ ಪಂಚಾಯಿತ್ತಿ, ಪ್ರತಿ ರಸ್ತೆ, ಪ್ರತಿ ಮನೆ ಸುರೇಶ್ ಅವರ ಕೆಲಸ ನೋಡಿದೆ. ಇಂದು ಆ ಭಾಗದಲ್ಲಿ ಕೆರೆಗಳು ತುಂಬಿ ಅಂತರ್ಜಲ ಹೆಚ್ಚಳವಾಗಿದ್ದರೆ, ಬಡವರಿಗೆ ಮನೆ, ನಿವೇಶನ ನೀಡಿದ್ದರೆ, ನರೇಗಾದಲ್ಲಿ ಹಣ ಬಂದಿದ್ದರೆ ಅದು ಸುರೇಶ್ ಅವರ ಕೊಡುಗೆ ಇದೆ. ಮತದಾರರು ಪ್ರಜ್ಞಾವಂತರು. ಅವರು ಯಾರನ್ನೇ ನಿಲ್ಲಿಸಿದರೂ ಮತದಾರರು ಉತ್ತರ ಕೊಡುತ್ತಾರೆ ಎಂದರು.
11
+ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ದಾಖಲೆಯ ಮತದಾನ
12
+ ನನ್ನ ವಿರುದ್ಧ ಚಕ್ರವರ್ತಿ ಅಶೋಕ್ ಕೂಡ ಸ್ರ್ಪಧಿಸಿದ್ದರು. ರಾಜಕಾರಣ ಎಂದರೆ ಜನ ತೀರ್ಮಾನ ಮಾಡುತ್ತಾರೆ. ನಾವು ಯಾಕೆ ಚಿಂತಿಸಬೇಕು. ಕುಮಾರಸ್ವಾಮಿ ಅವರು ಬಂದು ನಿಂತರೂ ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು. ಲೋಕಸಭೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕೇಳಿದಾಗ, ಈಗಾಗಲೇ ಮೂರ್ನಾಲ್ಕು ಬಾರಿ ಚರ್ಚೆ ಮಾಡಿದ್ದು, ಮತ್ತೊಂದು ಸುತ್ತಿನ ಸಮೀಕ್ಷೆ ನಡೆಯುತ್ತಿದೆ. ಎಲ್ಲ ಮುಗಿದ ನಂತರ ಅಭ್ಯರ್ಥಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
eesanje/url_46_233_2.txt ADDED
@@ -0,0 +1,8 @@
 
 
 
 
 
 
 
 
 
1
+ ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಮತ್ತು ತುಟ್ಟಿ ಭತ್ಯೆ ಪಾವತಿಸಲು ಸರ್ಕಾರ ಆದೇಶ
2
+ ಬೆಂಗಳೂರು,ಫೆ.18- ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಸೆಪ್ಟೆಂಬರ್ 4 ರಿಂದ ಅನ್ವಯಿಸುವಂತೆ ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರಿಗೆ 15,196.72 ರೂ. ಮಾಸಿಕ ಕನಿಷ್ಠ ವೇತನದ ಜೊತೆಗೆ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿ ಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಆದೇಶದಲ್ಲಿ ತಿಳಿಸಲಾಗಿದೆ.
3
+ 14ನೇ ಮತ್ತು 15ನೇ ಹಣಕಾಸು ಆಯೋಗದ ಅನುದಾನ ಅಥವಾ ಗ್ರಾಮ ಪಂಚಾಯತಿಯ ಸಂಪನ್ಮೂಲ ಬಳಸಿಕೊಂಡು ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಡಿಜಿಟಲೀಕರಿಸಲು ಕ್ರಮ ವಹಿಸಿದ್ದು, ಇಲ್ಲಿಯವರೆಗೆ 5,494 ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
4
+ ಗ್ರಾಮ ಪಂಚಾಯತಿಯ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನರ್ಜನೆ ಮುಂತಾದ ಸೌಲಭ್ಯಗಳನ್ನು ನೀಡಲಾಗುವುದು ಎಂದು ಆಯವ್ಯಯದಲ್ಲಿ ಘೋಷಿಸಲಾಗಿತ್ತು.
5
+ ಘೋಷಣೆಯನ್ನು ಸಾಕಾರಗೊಳಿಸುವಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಪಾತ್ರವು ಹಿರಿದು ಹಾಗೂ ಮಹತ್ವ ಎಂದು ಪರಿಗಣಿಸಿ, ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಾದ ಅರಿವು ಕೇಂದ್ರಗಳ ಕೆಲಸದ ಸಮಯವನ್ನು 6 ರಿಂದ 8 ಗಂಟೆಗಳಿಗೆ ಏರಿಸಿ ಮಾಸಿಕ 16,382.52 ರೂ. ಮಾಸಿಕ ಕನಿಷ್ಠ ವೇತನ ಮತ್ತು 1542 ರೂ. ವ್ಯತ್ಯಯವಾಗುವ ತುಟ್ಟಿ ಭತ್ಯೆ ಸೇರಿಸಿ ಮಾಸಿಕ 17,924.52 ರೂ, ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.
6
+ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಸಂಪೂರ್ಣ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯಗಳ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಿಗೆ ವರ್ಗಾವಣೆಗೊಂಡ ನಂತರ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಅಭಿವೃದ್ಧಿಯಲ್ಲಿ ಅಗಾಧವಾದ ಸಾಧನೆಯಾಗಿದೆ, 5,895 ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ 4,895 ಗ್ರಂಥಾಲಯ ಕಟ್ಟಡಗಳ ನವೀಕರಣ, ಪುಸ್ತಕ, ನಿಯತಕಾಲಿಕಗಳ ಸಂಗ್ರಹಣೆ ಇನ್ನಿತರ ಪರಿಕರಗಳನ್ನು ಒದಗಿಸಿ ಅಭಿವೃದ್ಧಿಪಡಿಸಲಾಗಿದೆ ಎಂದು ವಿವರಗಳನ್ನು ನೀಡಿದ್ದಾರೆ.
7
+ ಶಾಲೆಗಳು ಮುಚ್ಚಿದ್ದರೂ ಮಕ್ಕಳು ಓದುವ ಅಭ್ಯಾಸದಿಂದ ದೂರ ಉಳಿಯಬಾರದು ಎಂಬ ಉದ್ದೇಶದೊಂದಿಗೆ ಓದುವ ಬೆಳಕು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯ ಅಕಾರಿಗಳು, ಅಜೀಂ ಪ್ರೇಮ್ ಜೀ ಫೌಂಡೇಶನ್, ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಮತ್ತು ಶಿಕ್ಷಣ ಫೌಂಡೇಶನ್ ಸಂಸ್ಥೆಗಳು ನೆರವು ನೀಡಿವೆ, 6ರಿಂದ 18 ವರ್ಷದ ಮಕ್ಕಳಿಗೆ ಗ್ರಂಥಾಲಯದ ಸದಸ್ಯತ್ವವನ್ನು ನೀಡಿ ಅವರು ಮನೆಗೆ ಪುಸ್ತಕ ತೆಗೆದುಕೊಂಡು ಹೋಗಿ ಓದಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ, ಇದರ ಪರಿಣಾಮವಾಗಿ ಇಂದು ಗ್ರಂಥಾಲಯಗಳಲ್ಲಿ ಒಟ್ಟು 46,89,220 ಮಕ್ಕಳು ನೋಂದಣಿಯಾಗಿದ್ದಾರೆ ಎಂಬ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ.
8
+ ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಮಕ್ಕಳ ಸ್ನೇಹಿಯಾಗಿಸಲು ಓದಿನ ಮನೆಗೆ ಹೋಗೋಣ, ಚದುರಂಗ ಆಟ ಆಡೋಣ ಅಭಿಯಾನ, ಗಟ್ಟಿ ಓದು ಅಭಿಯಾನ, ಅಮ್ಮನಿಗಾಗಿ ಒಂದು ಪುಸ್ತಕ, ಪತ್ರ ಬರೆಯುವ ಅಭಿಯಾನ, ಚಿಣ್ಣರ ಚಿತ್ತಾರ, ನಿಮ್ಮ ಗೆಳೆಯರನ್ನು ಗ್ರಂಥಾಲಯಕ್ಕೆ ಕರೆತನ್ನಿ, ಮಕ್ಕಳಿಗೆ ಬೇಸಿಗೆ ಶಿಬಿರ, ಸಣ್ಣ ಕಥೆ ಬರೆಯುವುದು, ನಾನು ಓದುವ ಪುಸ್ತಕಗಳು, ನನ್ನ ಪ್ರೀತಿಯ ಗ್ರಂಥಾಲಯ, ವಾರ್ತಾ ಪತ್ರಿಕೆ ಓದೋಣ ಅಭಿಯಾನಗಳನ್ನು ಕೈಗೊಳ್ಳಲಾಗಿದ್ದು ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳು ಗ್ರಾಮೀಣ ಮಕ್ಕಳಲ್ಲಿ ಹೊಸ ಉತ್ಸಾಹ ಹಾಗೂ ಭರವಸೆಯನ್ನು ತಂದುಕೊಟ್ಟಿದೆ ಎಂದು ಸಚಿವರು ಹೇಳಿದ್ದಾರೆ.
eesanje/url_46_233_3.txt ADDED
@@ -0,0 +1,5 @@
 
 
 
 
 
 
1
+ ಚುನಾವಣೆಯಲ್ಲಿ ಡಾಲಿ ಧನಂಜಯ್ ಸ್ಪರ್ಧೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
2
+ ಬೆಂಗಳೂರು,ಫೆ.18- ಮೈಸೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾಲಿ ಧನಂಜಯ್ ಸ್ಪರ್ಧಿಸುವ ಕುರಿತಂತೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಡಾಲಿ ಧನಂಜಯ್ ಸ್ಪರ್ಧೆಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ಪಕ್ಷದಲ್ಲಿ ಅಂತಹ ಚರ್ಚೆಯೇ ಆಗಿಲ್ಲ. ಆ ತರಹ ಯಾವುದೇ ಸಾಧ್ಯತೆಗಳಿಲ್ಲ ಎಂದು ಹೇಳಿದರು.
3
+ ಅತ್ತ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎಸ್.ಎ.ರಾಮ್‍ದಾಸ್, ಡಾಲಿ ಧನಂಜಯ್ ಕಾಂಗ್ರೆಸ್ ಅಭ್ಯರ್ಥಿ ಮಾಡುವುದಾದರೆ ನಮ್ಮ ಅಭ್ಯಂತರವಿಲ್ಲ. ಅವರು ಯಾರನ್ನಾದರೂ ಅಭ್ಯರ್ಥಿ ಮಾಡಿಕೊಳ್ಳಲಿ. ಆದರೆ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿಗೆ ಸೇರಿದ್ದಾಗಿದೆ ಎಂದರು.
4
+ ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು ಭಾಗಕ್ಕೆ ಮತ್ತು ಜಿಲ್ಲೆಗೆ ಕೊಟ್ಟಿರುವ ಕೊಡುಗೆಗಳನ್ನು ಮುಂದಿಟ್ಟುಕೊಂಡು ನಾವು ಜನರ ಮುಂದೆ ಹೋಗುತ್ತೇವೆ, ಗೆಲ್ಲುತ್ತೇವೆ ಎಂದು ಹೇಳಿದರು.
5
+ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಕಂಡುಬಂದಿದ್ದು, ಡಾಲಿ ಧನಂಜಯ್ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆಗಳು ಹರಿದಾಡುತ್ತಿವೆ. ಅಚ್ಚರಿ ಎಂಬಂತೆ ಡಾಲಿ ಧನಂಜಯ್ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವಾಗ ಹಿಡಿದಿದ್ದ ಆಕರ್ಷಕ ಬ್ಯಾಗ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು.
eesanje/url_46_233_4.txt ADDED
@@ -0,0 +1,4 @@
 
 
 
 
 
1
+ ಮಂಗಳೂರು : ವಿಮಾನ ನಿಲ್ದಾಣದ ಡ್ರೈನೇಜ್ ಚೇಂಬರ್‌‌ನಲ್ಲಿ ಚಿನ್ನ ಪತ್ತೆ
2
+ ಮಂಗಳೂರು, ಫೆ.18: ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ವಾಶ್‍ರೂಮ್‍ನ ಡ್ರೈನೇಜ್ ಚೇಂಬರ್‍ನಲ್ಲಿ ಬಚ್ಚಿಟ್ಟಿದ್ದ 45 ಲಕ್ಷ ರೂ ಮೌಲ್ಯದ 733 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
3
+ ವಿದೇಶದಿಂದ ಬರುವ ಪ್ರಯಾಣಿಕರು ಹೊರಬರುವ ಪ್ರದೇಶದಲ್ಲಿನ ವಾಶ್‍ರೂಮ್‍ನ ಡ್ರೈನೇಜ್ ಚೇಂಬರ್‍ನಲ್ಲಿ ಕಪ್ಪು ಬಣ್ಣದ ಚೀಲದಲ್ಲಿ ಬಚ್ಚಿಟ್ಟಿದ್ದ ಪೇಸ್ಟ್‍ರೂಪದ ಚಿನ್ನ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
4
+ ವಾಶ್‍ರೂಮ್‍ನಲ್ಲಿ ಚಿನ್ನವನ್ನು ಇರಿದಿದ್ದ ವ್ಯಕ್ತಿಯ ಗುರುತು ಇನ್ನೂ ತಿಳಿದಿಲ್ಲ.ಕಳ್ಳಸಾಗಣೆ ಮೂಲಕ ಚಿನ್ನದ ತರಲಾಗಿದೆ ಪ್ರಕರಣ ಕುರಿತಂತೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
eesanje/url_46_233_5.txt ADDED
@@ -0,0 +1,4 @@
 
 
 
 
 
1
+ ಕೆಎಸ್‌ಆರ್‌ಟಿಸಿಗೆ 5 ಪ್ರಶಸ್ತಿಗಳ ಗರಿ
2
+ ಬೆಂಗಳೂರು,ಫೆ.18- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ವಲ್ರ್ಡ್ ಮ್ಯಾನುಫ್ಯಾಕ್ಟರಿಂಗ್ ಕಾಂಗ್ರೆಸ್ ಮತ್ತು ವಲ್ರ್ಡ್ ಮಾರ್ಕೆಟಿಂಗ್ ಕಾಂಗ್ರೆಸ್‍ನ 5 ಪ್ರಶಸ್ತಿಗಳು ಲಭಿಸಿವೆ. ಅಲ್ಲದೆ ನಿಗಮದ ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಕಾಧಿರಿ ಡಾ.ಟಿ.ಎಸ್.ಲತಾ ಅವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿದೆ.
3
+ ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ, ಇವಿ ಪವರ್ ಪ್ಲಸ್ ಜಾಗತಿಕ ಬ್ರಾಂಡ್ ಉತ್ಕøಷ್ಟತೆ ಪ್ರಶಸ್ತಿ, ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಂಟಿಂಗ್ ಉಪಕ್ರಮಕ್ಕಾಗಿ ವರ್ಷದ ವ್ಯವಹಾರಿಕ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ವಿನೂತನ ಉಪಕ್ರಮಕ್ಕಾಗಿ ಜಾಗತಿಕ ಮಾನವ ಸಂಪನ್ಮೂಲ ಉತ್ಕøಷ್ಟತೆ ಪ್ರಶಸ್ತಿ, ಕಾರ್ಮಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದಕ್ಕೆ ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಯು ನಿಗಮಕ್ಕೆ ದೊರೆತಿದೆ.
4
+ ಮುಂಬೈ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಯುಎಸ್‍ನ ನಿನಾ ಇ ಉಡರ್ಡ ಅಸೋಸಿಯೇಟ್ಸ್ ಮುಖ್ಯಸ್ಥ ನಿನಾ ಇ ಉಡರ್ಡ, ದುಬೈನ ಓಜೋನ್ ಗ್ರೂಪ್ ಡಾ.ಓವಿಲಿಯಾ ಫೆರ್ನಾಂಡಿಸ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಟಿ.ಎಸ್.ಲತಾ, ವಿಭಾಗೀಯ ತಾಂತ್ರಿಕ ಎಂಜಿನಿಯರ್ ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸಿ.ಸೌಮ್ಯ, ಸಹಾಯಕ ಆಡಳಿತಾಧಿಕಾರಿ ಎಸ್.ಶಿಭಾ ಅವರುಗಳು ಪ್ರಶಸ್ತಿ ಸ್ವೀಕರಿಸಿದರು.
eesanje/url_46_233_6.txt ADDED
@@ -0,0 +1,5 @@
 
 
 
 
 
 
1
+ ಸಂಚಾರಿ ನಿಯಮ ಉಲ್ಲಂಘನೆ : 50 ಸಾವಿರಕ್ಕಿಂತ ಹೆಚ್ಚು ಬಾಕಿ ದಂಡ ಉಳಿಸಿಕೊಂಡಿದ್ದ 84 ವಾಹನ ಜಪ್ತಿ
2
+ ಬೆಂಗಳೂರು,ಫೆ.17- ಸಂಚಾರಿ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡಿ ದಂಡ ಪಾವತಿಸದೇ 50 ಸಾವಿರಕ್ಕಿಂತ ಹೆಚ್ಚಿನ ಬಾಕಿ ಉಳಿಸಿಕೊಂಡಿದ್ದ ವಾಹನಗಳ ಪತ್ತೆ ಮಾಡು ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ದಕ್ಷಿಣ ವಿಭಾಗದ ಪೊಲೀಸರು 84 ದ್ವಿಚಕ್ರ ವಾಹನ ಹಾಗೂ ಒಂದು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
3
+ ಈ ವಾಹನಗಳ ಮೇಲೆ ಒಟ್ಟು ಸುಮಾರು 10, 210 ವಿವಿಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಈ ವಾಹನಗಳ ಮೇಲೆ ಒಟ್ಟು ಸುಮಾರು 1.74 ಕೋಟಿ ರೂ. ದಂಡದ ಮೊತ್ತ ಬಾಕಿ ಇದ್ದು, ಪೊಲೀಸರು ಮುಂದಿನ ಸೂಕ್ತ ಕಾನೂನು ಕ್ರಮ ಜರುಗಿಸಲಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ಸಂಚಾರ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡಿ 50 ಸಾವಿರಕ್ಕಿಂತ ಹೆಚ್ಚಿನ ದಂಡದ ಮೊತ್ತ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದ ವಾಹನಗಳನ್ನು ಪತ್ತೆ ಮಾಡಲು ಸಂಚಾರ ದಕ್ಷಿಣ ವಿಭಾಗದ ಎಲ್ಲಾ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಇನ್‍ಸ್ಪೆಕ್ಟರಿಗೆ ಸೂಚಿಸಲಾಗಿತ್ತು. ಅದರಂತೆ ವಿಶೇಷ ಕಾರ್ಯಾಚರಣೆನಡೆಸಲಾಗಿದೆ.
4
+ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಜನ ಬದಲಾವಣೆ ಮಾಡಲಿದ್ದಾರೆ : ಡಿಸಿಎಂ
5
+ ದಕ್ಷಿಣ ಉಪವಿಭಾಗ: 48 ವಾಹನಜಯನಗರ -26 ವಾಹನ, ಬನಶಂಕರಿ 9, ಕೆ.ಎಸ್.ಲೇಔಟ್-5, ಬಸವನಗುಡಿ-4, ವಿವಿಪುರಂ -4 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಆಗ್ನೇಯ ಉಪವಿಭಾಗ -29 ವಾಹನ.ಹುಳಿಮಾವು -11 ವಾಹನ, ಆಡುಗೋಡಿ -11, ಮೈಕೋಲೇಔಟ್-6, ಮಡಿವಾಳ-1 ವಾಹನ ಜಪ್ತಿ ಮಾಡಲಾಗಿದೆ.ಎಚ್‍ಎಸ್‍ಆರ್ ಲೇಔಟ್ ಉಪವಲಯ- 8 ವಾಹನ.ಎಚ್‍ಎಸ್‍ಆರ್ ಲೇಔಟ್- 3 ವಾಹನ, ಎಲೆಕ್ಟ್ರಾನಿಕ್ ಸಿಟಿ -3 ವಾಹನ, ಬೆಳ್ಳಂದೂರು – 2 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
eesanje/url_46_233_7.txt ADDED
@@ -0,0 +1,8 @@
 
 
 
 
 
 
 
 
 
1
+ ಕರಾವಳಿಯಿಂದ ‘ಲೋಕ ಕಹಳೆ’ ಚಾಲನೆ ಕೊಟ್ಟ ಕಾಂಗ್ರೆಸ್
2
+ ಬೆಂಗಳೂರು,ಫೆ.17- ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಮೂಲಕ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಪುಟದ ಎಲ್ಲಾ ಸಚಿವರು, ಶಾಸಕರು, ಕೆಪಿಸಿಸಿ ಪದಾಕಾರಿಗಳು, ಎಐಸಿಸಿ ಕಾರ್ಯದರ್ಶಿಗಳು, ಪ್ರಮುಖ ನಾಯಕರು ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
3
+ ಕೋಮು ಸೂಕ್ಷ್ಮ ಹಾಗೂ ಬಿಜೆಪಿಯ ಭದ್ರಕೋಟೆಯಾಗಿರುವ ಕರಾವಳಿ ಭಾಗದಿಂದಲೇ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದೆ. ಕಳೆದ ತಿಂಗಳೇ ನಡೆಯಬೇಕಿದ್ದ ಬೃಹತ್ ಕಾರ್ಯಕ್ರಮ ಕೆಲವು ಕಾರಣಗಳಿಂದ ಮುಂದೂಡಿಕೆಯಾಗಿತ್ತು. ಬಜೆಟ್ ಮಂಡನೆ ಬಳಿಕ ನಡೆಯುತ್ತಿರುವ ಈ ಸಮಾವೇಶ ಕಾಂಗ್ರೆಸ್‍ಗೆ ಆನೆ ಬಲ ತಂದುಕೊಟ್ಟಂತಾಗಿದೆ. ರಾಜ್ಯದ ಎಲ್ಲಾ ಭಾಗಗಳಿಂದಲೂ ಪಕ್ಷದ ಕಾರ್ಯಕರ್ತರು ಸಮಾವೇಶಕ್ಕಾಗಿ ಮಂಗಳೂರಿಗೆ ಆಗಮಿಸಿದ್ದರು. ಸ್ಥಳೀಯ ನಾಯಕರು ಸಮಾವೇಶಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಮಂಗಳೂರಿನಾದ್ಯಂತ ಫ್ಲಕ್ಸ್, ಬ್ಯಾನರ್‍ಗಳ ಅಬ್ಬರ ಜೋರಾಗಿತ್ತು.
4
+ ಕೇಜ್ರಿವಾಲ್ ಖುದ್ದು ಹಾಜರಿಗೆ ವಿನಾಯ್ತಿ ನೀಡಿದ ನ್ಯಾಯಾಲಯ
5
+ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮಾವೇಶದ ಉಸ್ತುವಾರಿ ವಹಿಸಿಕೊಂಡಿದ್ದರು. ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಕಾರ್ಯಕರ್ತರು ಭಾಗವಹಿಸಿ, ಚುನಾವಣೆಯ ರಣೋತ್ಸಾಹವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ತಾವು ಬಜೆಟ್ ಮಂಡಿಸಿದ್ದು, ಕೇಂದ್ರ ಸರ್ಕಾರದ ಅಸಹಕಾರದ ಹೊರತಾಗಿಯೂ ಆರ್ಥಿಕ ಶಿಸ್ತನ್ನು ಪಾಲಿಸಿದ್ದೇನೆ. ಕೇಂದ್ರ ಸರ್ಕಾರ ನಿರಂತರವಾಗಿ ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬಿಜೆಪಿಯ 25 ಮಂದಿ ಸಂಸದರು ಮತ್ತು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಆರ್ಥಿಕ ತಾರತಮ್ಯದ ವಿರುದ್ಧ ಬಾಯಿ ಬಿಡುತ್ತಿಲ್ಲ ಎಂದು ಕಿಡಿಕಾರಿದರು.
6
+ ಕಾಂಗ್ರೆಸ್ ಸರ್ಕಾರ ರಾಜ್ಯದ ಪ್ರತಿಯೊಂದು ಬಡ ಕುಟುಂಬಕ್ಕೂ ವರ್ಷಕ್ಕೆ 50 ರಿಂದ 55 ಸಾವಿರ ರೂ.ಗಳಷ್ಟು ಆರ್ಥಿಕ ನೆರವನ್ನು ನೀಡುತ್ತಿದೆ. ಇದಕ್ಕಾಗಿ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ದೇಶ ಮತ್ತು ರಾಜ್ಯ ದಿವಾಳಿಯಾಗಲಿದೆ ಎಂದು ಟೀಕಿಸಿದ್ದವರೇ ನಮ್ಮ ಗ್ಯಾರಂಟಿ ಪದವನ್ನು ಹೈಜಾಕ್ ಮಾಡಿದ್ದಾರೆ ಎಂದು ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
7
+ ರಾಷ್ಟ್ರ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವದ್ದು : ಚಂದ್ರಚೂಡ್
8
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಕೂ ಹೆ���್ಚು ಸ್ಥಾನಗಳನ್ನು ಗೆಲ್ಲಲು ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ. ನಾವು ಜನರ ಬದುಕಿನ ಸುಧಾರಣೆಗಾಗಿ ಪ್ರಯತ್ನ ಮಾಡುತ್ತಿದ್ದೇವೆ. ಬಿಜೆಪಿಯವರು ಭಾವನಾತ್ಮಕ ರಾಜಕಾರಣದ ಮೂಲಕ ಸಮಾಜವನ್ನು ವಿಭಜಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
eesanje/url_46_233_8.txt ADDED
@@ -0,0 +1,7 @@
 
 
 
 
 
 
 
 
1
+ ಕುಪೇಂದ್ರರೆಡ್ಡಿ ಗೆಲುವಿಗೆ ಜೆಡಿಎಸ್ – ಬಿಜೆಪಿ ರಣತಂತ್ರ
2
+ ಬೆಂಗಳೂರು,ಫೆ.17- ವಿಧಾನಸಭೆಯಿಂದ ರಾಜ್ಯಸಭೆಗೆ ಫೆ.27ರಂದು ನಡೆಯುವ ಚುನಾವಣೆಯಲ್ಲಿ ಮಿತ್ರ ಪಕ್ಷಗಳ ಇಬ್ಬರು ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ. ನಿನ್ನೆ ಖಾಸಗಿ ಹೋಟೆಲ್‍ನಲ್ಲಿ ಸಭೆ ಸೇರಿದ್ದ ಉಭಯ ಪಕ್ಷಗಳ ನಾಯಕರು ಇಬ್ಬರು ಅಭ್ಯರ್ಥಿಗಳ ಗೆಲುವಿನ ಸಾಧ್ಯಸಾಧ್ಯತೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
3
+ ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಕೆ.ಬಾಂಡೆಗೆ ಅವರು ಗೆಲುವು ಸುಲಭವಾಗಲಿದೆ. ಅವರ ಗೆಲುವಿಗೆ ಅಗತ್ಯವಿರುವ 45 ಶಾಸಕರ ಮತಗಳನ್ನು ಚಲಾಯಿಸುವುದು, ಉಳಿದ ಬಿಜೆಪಿ ಶಾಸಕರ ಹೆಚ್ಚುವರಿ ಮತಗಳನ್ನು ಕುಪೇಂದ್ರ ರೆಡ್ಡಿ ಅವರಿಗೆ ಚಲಾಯಿಸಲು ನಿರ್ಧರಿಸಲಾಗಿದೆ. ಆದರೂ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ಕೊರತೆಯಾಗುವ ಮತಗಳನ್ನು ಗಳಿಸುವುದು ಹೇಗೆ ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ.
4
+ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿದಂತೆ ಉಭಯ ಪಕ್ಷಗಳ ನಾಯಕರು ಖಾಸಗಿ ಹೋಟೆಲ್‍ನಲ್ಲಿ ಸಭೆ ಸೇರಿ ಚರ್ಚಿಸಿದ್ದಾರೆ.
5
+ ಮೋದಿ ಸರ್ಕಾರ ದೇಶದ ರೈತರಿಗೆ ಶಾಪವಾಗಿದೆ : ಖರ್ಗೆ
6
+ ಕಾಂಗ್ರೆಸ್‍ನಲ್ಲಿರುವ ಅಸಮಾಧಾನಿತ ಶಾಸಕರ ಮತ ಪಡೆಯುವುದು ಹೇಗೆ? ಪಕ್ಷೇತರ ಶಾಸಕರ ಮತ ಪಡೆಯುವುದು ಸೇರಿದಂತೆ ಸಾಧ್ಯವಿರುವ ಎಲ್ಲ ಮಾರ್ಗಗಳ ಬಗ್ಗೆಯೂ ಚರ್ಚೆ ನಡೆಸಿದ್ದು, ಶತಾಯ ಗತಾಯ ರಾಜ್ಯಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟದ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
7
+ ರಾಜ್ಯಸಭೆ ಚುನಾವಣೆಯ 5ನೇ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ ಅವರ ಗೆಲುವಿನ ಸಾಧಕ-ಬಾಧಕಗಳು ಈ ಸಭೆಯಲ್ಲಿ ಚರ್ಚಿತವಾಗಿರುವ ವಿಚಾರಗಳನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತರಲು ನಿರ್ಧರಿಸಲಾಗಿದೆ. ಬಿಜೆಪಿ ವರಿಷ್ಠರು ನೀಡುವ ಮಾರ್ಗದರ್ಶನದಂತೆ ರಾಜ್ಯಸಭೆ ಚುನಾವಣೆಯನ್ನು ಎದುರಿಸಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ಹೇಳಿವೆ.
eesanje/url_46_233_9.txt ADDED
@@ -0,0 +1,8 @@
 
 
 
 
 
 
 
 
 
1
+ ಹುಂಡಿ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಸೀಮಿತ : ಸಚಿವ ರಾಮಲಿಂಗಾರೆಡ್ಡಿ
2
+ ಬೆಂಗಳೂರು,ಫೆ.17- ದೇವಸ್ಥಾನಗಳಿಂದ ಸಂಗ್ರಹಿಸಿದ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಖರ್ಚು ಮಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಮುಖರೊಬ್ಬರಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದು, ಚುನಾವಣೆ ಕಾಲದಲ್ಲಿ ಈ ರೀತಿ ಜನರನ್ನು ದಾರಿ ತಪ್ಪಿಸುವುದು ಪ್ರಯೋಜನಕಾರಿಯಲ್ಲ ಎಂದು ಹೇಳಿದ್ದಾರೆ.
3
+ ಸಾಮಾಜಿಕ ಜಾಲತಾಣದಲ್ಲಿ ಪ್ರಮುಖರೊಬ್ಬರು ಪೋಸ್ಟ್ ಮಾಡಿ, ಕರ್ನಾಟಕ ಸರ್ಕಾರ ತನ್ನ ಬಜೆಟ್‍ನಲ್ಲಿ 330 ಕೋಟಿ ರೂ.ಗಳನ್ನು ವಕ್ ಆಸ್ತಿಗಳ ಅಭಿವೃದ್ಧಿ, ಹಜ್ ಭವನಗಳ ನಿರ್ಮಾಣ ಮತ್ತು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ನೀಡಿದೆ. ಕರ್ನಾಟಕ ರಾಜ್ಯಕ್ಕೆ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಂದ 400 ಕೋಟಿ ಸೇರಿ 450 ಕೋಟಿ ರೂ.ಗೂ ಹೆಚ್ಚು ಆದಾಯ ಧಾರ್ಮಿಕ ದತ್ತಿ ಇಲಾಖೆಗೆ ಬರುತ್ತಿದೆ. ಇದಕ್ಕಾಗಿಯೇ ಹಿಂದೂ ದೇವಾಲಯಗಳನ್ನು ಸರ್ಕಾರದಿಂದ ಮುಕ್ತಗೊಳಿಸುವ ಮಸೂದೆಗೆ ವಿರೋಧ ವ್ಯಕ್ತವಾಗುತ್ತಿದೆ.
4
+ ಇದು ಶೇ.101 ರಷ್ಟು ಜಾತ್ಯತೀತತೆ ಎಂದು ಲೇವಡಿ ಮಾಡಿದ್ದರು. ಜೊತೆಗೆ ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಉತ್ತರ ಕನ್ನಡ, ತುಮಕೂರಿನ ಜಿಲ್ಲೆಗಳ ದೇವಾಲಯಗಳ ಸಂಖ್ಯೆ ಮತ್ತು ಅದರಿಂದ ಬರುತ್ತಿರುವ ಆದಾಯದ ಪಟ್ಟಿಯನ್ನು ಲಗತ್ತಿಸಿದ್ದರು.
5
+ ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಸಹಕರಿಸಿದೆ : ಪ್ರಹ್ಲಾದ್ ಜೋಶಿ
6
+ ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಮಲಿಂಗಾರೆಡ್ಡಿ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಕನ್ನಡಿಗರು ಹಾಗೂ ದೇಶವನ್ನು ಈ ರೀತಿ ದಾರಿ ತಪ್ಪಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ನಾನು ಮತ್ತೊಮ್ಮೆ ಪುನರುಚ್ಛರಿಸುತ್ತಿದ್ದೇನೆ, ಧಾರ್ಮಿಕ ದತ್ತಿ ಇಲಾಖೆಯಿಂದ ಸ್ವೀಕರಿಸಲಾಗುತ್ತಿರುವ ಹಣವನ್ನು ಹಿಂದೂ ದೇವಾಲಯಗಳಿಗೆ ಮಾತ್ರವೇ ಬಳಕೆ ಮಾಡಲಾಗುತ್ತಿದೆ. ಒಂದು ಪೈಸೆಯನ್ನೂ ಅನ್ಯ ಧರ್ಮೀಯ ಧಾರ್ಮಿಕ ಕೇಂದ್ರಗಳಿಗೆ ಬಳಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
7
+ ದೇವಸ್ಥಾನಗಳಿಂದ ಸಂಗ್ರಹವಾಗುವ ಆದಾಯವನ್ನು ಆಯಾ ದೇವಸ್ಥಾನಗಳ ಅಭಿವೃದ್ಧಿಗಾಗಿಯೇ ಬಳಸಲಾಗುತ್ತಿದೆ. ಅಪಪ್ರಚಾರಗಳು ರಾಜಕೀಯ ಷಡ್ಯಂತ್ರವಾಗಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿಯ ಮಿತ್ರರು ಈ ರೀತಿ ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಇಂತಹದ್ದೇ ಪ್ರಯತ್ನಗಳ ಮೂಲಕ ಹಿಂದುತ್ವದ ನಾಟಕವಾಡಲಾಗಿತ್ತು. ಆದರೆ ರಾಜ್ಯದ ಜನ ಸತ್ಯ ತಿಳಿದುಕೊಂಡಿದ್ದರು. ಅಪಪ್ರಚಾರಗಳಿಗೆ ಕಿವಿಗೊಡಲಿಲ್ಲ ಎಂದು ಹೇಳಿದ್ದಾರೆ.
8
+ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಜನಸ್ನೇಹಿಯಾಗಿದೆ. ಬಿಜೆಪಿ ಮತ್ತು ವಿಪಕ್ಷಗಳಿಗೆ ಬಜೆ��್ ವಿರೋಧಿಸಲು ಸಕಾರಣಗಳು ಸಿಗುತ್ತಿಲ್ಲ. ಅದಕ್ಕಾಗಿ ಇಂತಹ ನಾಟಕೀಯ ನಡವಳಿಕೆಯನ್ನು ಅನುಸರಿಸುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಅಪಪ್ರಚಾರದ ನಡುವೆಯೂ ಬಿಜೆಪಿ ಪಕ್ಷದ 25 ಸಂಸದರು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ವಂಚಿಸಿದ್ದೇಕೆ ಎಂದು ಪ್ರಶ್ನೆ ಮಾಡಿ ಎಂದು ಸಚಿವರು ತಿರುಗೇಟು ನೀಡಿದ್ದಾರೆ.
eesanje/url_46_234_1.txt ADDED
@@ -0,0 +1,5 @@
 
 
 
 
 
 
1
+ ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಸಹಕರಿಸಿದೆ : ಪ್ರಹ್ಲಾದ್ ಜೋಶಿ
2
+ ಹುಬ್ಬಳ್ಳಿ,ಫೆ.17- ಕಾಂಗ್ರೆಸ್‍ಗೆ ಮೊದಲಿನಿಂದಲೂ ಗಲಭೆ ಆರೋಪಿಗಳ ಪರ ಸಹಾನುಭೂತಿ ಇದ್ದುದ್ದರಿಂದ ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಸುದ್ದಿಗಾರರರೊಂದಿಗೆ ಮಾತನಾಡಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ದೂರಿದ್ದಾರೆ.
3
+ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ ಎಂದು ಅಭಿಪ್ರಾಯಿಸಿದ್ದಾರೆ. ಬಿಡುಗಡೆಗೆ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಆರೋಪಿಗಳ ಬಿಡುಗಡೆಗಾಗಿ ಲೆಟರ್ ಕೊಡುವುದು, ಒತ್ತಾಯ ಮಾಡುವುದು ನಡದೇ ಇತ್ತು ಎಂದು ಆರೋಪಿಸಿದ್ದಾರೆ.
4
+ ಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು
5
+ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಮೇಲೆ ದೇಶ ದ್ರೋಹದ ಆರೋಪಗಳಿದ್ದವು. ಕಾಂಗ್ರೆಸ್ ಸರ್ಕಾರ ಸರಿಯಾಗಿ ವಾದ ಮಂಡಿಸದೆ ಬಿಡುಗಡೆಗೊಳಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಸರ್ಕಾರ ಅನುಭವಿಸಲಿದೆ ಎಂದು ಎಚ್ಚರಿಸಿದ್ದಾರೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕಲ್ಲು ತೂರಾಟ ಮಾಡಿ ಪೊಲೀಸ್ ವಾಹನಗಳು ಜಖಂಗೊಳಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿಗೊಳಿಸಿದ್ದರು. ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಇವರ ಬಿಡುಗಡೆಗೆ ಸಹಕರಿಸಿದೆ ಎಂದು ಆರೋಪಿಸಿದ್ದಾರೆ.
eesanje/url_46_234_10.txt ADDED
@@ -0,0 +1,5 @@
 
 
 
 
 
 
1
+ ತೆರಿಗೆ ಸೋರಿಕೆ ತಡೆಗಟ್ಟಲು 3ಡಿ ಡ್ರೋನ್
2
+ ಬೆಂಗಳೂರು,ಫೆ.16- ಆಸ್ತಿ ತೆರಿಗೆ ಮತ್ತು ಇನ್ನಿತರ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಮತ್ತು ತೆರಿಗೆ ಸೋರಿಕೆ ತಡೆಗಟ್ಟಲು 3ಡಿ ಡ್ರೋನ್ ತಂತ್ರಜ್ಞಾನ ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್ ಮತ್ತು ಮರು ಮೌಲ್ಯಮಾಪನ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
3
+ ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ತೆರಿಗೆ ವಸೂಲಿಗೆ ಸ್ವಸಹಾಯ ಗುಂಪುಗಳ ಸೇವೆ ಪಡೆಯುವುದು, ನೇರಪಾವತಿ ಯೋಜನೆಯಡಿ ಖಾಯಂ ಮಾಡಿರುವ 24 ಸಾವಿರ ಪೌರ ಕಾರ್ಮಿಕರ ಜೊತೆಗೆ ಉಳಿದವರನ್ನು ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
4
+ 3,000 ವರ್ಷಗಳ ಹಿಂದೆ ಮೃತ ಪತಿ ಜೊತೆ ಜೀವಂತ ಸಮಾಧಿಯಾಗಿದ್ದ ಪತ್ನಿಯ ಪ್ರೀತಿಯ ಅಪ್ಪುಗೆ
5
+ ಯೋಜಿತ ನಗರೀಕರಣದ ಉದ್ದೇಶದಿಂದ ಒಂದು ಲಕ್ಷಕ್ಕೂ ಅಕ ಜನಸಂಖ್ಯೆ ಇರುವ ಸ್ಥಳೀಯ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತಿಕರಿಸಲಾಗುವುದು. ಎಲ್ಲಾ ಸ್ಥಳೀಯ ಸಂಸ್ಥೆಗಳ ಕಾರ್ಯ ಕಲಾಪಗಳನ್ನು ನೇರ ಪ್ರಸಾರ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಮೈಸೂರಿನ ಪ್ರಖ್ಯಾತ ಲ್ಯಾನ್ಸ್‍ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
eesanje/url_46_234_11.txt ADDED
@@ -0,0 +1,6 @@
 
 
 
 
 
 
 
1
+ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಸೆರೆ
2
+ ಬೆಂಗಳೂರು,ಫೆ.16-ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ಯು.ಎ.ಪಿ.ಎ ಪ್ರಕರಣವೊಂದರಲ್ಲಿ ತಲೆ ಮರೆಸಿಕೊಂಡಿದ್ದಪಿ.ಎಫ್.ಐ ನ ದಾವಣಗೆರೆ ಜಿಲ್ಲಾ ಕಾರ್ಯದರ್ಶಿಯನ್ನು ಕೆ.ಜಿ.ಹಳ್ಳಿ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ತಾಹೀರ್ ಹುಸೇನ್ ಅಲಿಯಾಸ್ ಆರ್ ಕೆ ಹುಸೇನ್ ಬಂಧಿತ ಆರೋಪಿ. ಸೆ.20, 2022 ರಂದು ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದ (ಪಿ.ಎಫ್.ಐ) ಕಾರ್ಯಕರ್ತರು ದೇಶದಾದ್ಯಂತ ಧರ್ಮ ಧರ್ಮದ ಮಧ್ಯೆ ಕೋಮು ದ್ವೇಷವನ್ನು ಉಂಟು ಮಾಡಲು ಮುಸ್ಲಿಂ ಯುವಕರನ್ನು ರಾಜ್ಯಾದ್ಯಂತ ಸಂಘಟನೆಯನ್ನು ಮಾಡುತ್ತಿದ್ದರು.
3
+ ಈ ಸಂಬಂಧ ತರಬೇತಿಯನ್ನು ಸಹ ನೀಡುತ್ತಿದ್ದು, ಮಾರಕಾಸ್ತ್ರಗಳನ್ನು ಹೊಂದಿರಬಹುದಾಂತಹ ಸಾಧ್ಯತೆ ಇರುತ್ತದೆ ಎಂಬ ಖಚಿತ ಮಾಹಿತಿಯ ಮೇರೆಗೆ ಒಟ್ಟು 19 ವ್ಯಕ್ತಿಗಳ ವಿರುದ್ಧ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಯು.ಎ.ಪಿ.ಎ ಪ್ರಕರಣ ದಾಖಲಾಗಿರುತ್ತದೆ. ಸೆ.21, 2022ರಂದು ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು ರಾಜ್ಯಾದ್ಯಂತ ಏಕಾಕಾಲದಲ್ಲಿ ದಾಳಿಯನ್ನು ಕೈಗೊಂಡು 15 ಪಿಎಫ್‍ಐ. ಸಂಘಟನೆಯ ಪ್ರಮುಖ ಪದಾಕಾರಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಪ್ರಕರಣದಲ್ಲಿ ನಾಲ್ವರು ತಲೆಮರೆಸಿಕೊಂಡಿರುತ್ತಾರೆ.ಪ್ರಕರಣ ದಾಖಲಾದ ನಂತರ ಭಾರತ ಸರ್ಕಾರವು ಪಿಎಫ್‍ಐ. ಸಂಘಟನೆಯನ್ನು ನಿಷೇಧಿತ ಸಂಘಟನೆ ಎಂದು ಆದೇಶ ಮಾಡಿದೆ.
4
+ ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ
5
+ ಪ್ರಕರಣದ ತನಿಖೆಯನ್ನು ಯುಎಪಿಎ ಕಾಯ್ದೆಯ ಪ್ರಕಾರ ಕೈಗೊಂಡು, ಬಂಧಿತರಾಗಿದ್ದ 15 ವ್ಯಕ್ತಿಗಳ ವಿರುದ್ಧ ವಿಶೇಷ ಎನ್‍ಐಎ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಾಲ್ಕು ವ್ಯಕ್ತಿಗಳ ಪೈಕಿ ಒಬ್ಬನ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಕೆ.ಜಿ. ಹಳ್ಳಿ ಉಪ ವಿಭಾಗದ ದಾವಣಗೆರೆಯ ಹರಿಹರದ ಪ್ರಶಾಂತ್ ನಗರದ ಬಳಿ ವಶಕ್ಕೆ ಪಡೆದುಕೊಂಡಿರುತ್ತಾರೆ.
6
+ ಈ ಪ್ರಕರಣದಲ್ಲಿ ಹಾಲಿ ತನಿಖಾಧಿಕಾರಿಯಾದ ಕೆ.ಜಿ. ಹಳ್ಳಿ ಉಪ ವಿಭಾಗದ ಎಸಿಪಿ ಪ್ರಕಾಶ್ ರಾಠೋಡ್, ಅವರು ಆರೋಪಿಯನ್ನು ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ವಶಕ್ಕೆ ಪಡೆದು ತನಿಖೆ ಕೈಗೊಂಡಿರುತ್ತಾರೆ.
eesanje/url_46_234_12.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಬಸ್‍ನಲ್ಲಿ ಮೊಬೈಲ್ ಎಗರಿಸುತ್ತಿದ್ದ ಮಹಿಳಾ ಗ್ಯಾಂಗ್ ಬಂಧನ
2
+ ಬೆಂಗಳೂರು,ಫೆ.16-ಮಹಿಳಾ ಪ್ರಯಾಣಿಕರನ್ನೇ ಗುರಿಯಾಗಿಸಿಕೊಂಡು ಜನನಿಬಿಡ ಬಸ್ ನಿಲ್ದಾಣಗಳು ಹಾಗೂ ಜನಜಂಗುಳಿ ಇರುವ ದಿನಗಳಂದು ಬಿಎಂಟಿಸಿ ಬಸ್‍ಗಳಲ್ಲಿ ನೂಕು ನುಗ್ಗಲು ಉಂಟು ಮಾಡಿ ಪ್ರಯಾಣಿಕರ ಮೊಬೈಲ್‍ಗಳನ್ನು ಕಳ್ಳತನ ಮಾಡಿ ಮನೆಯಲ್ಲಿ ಶೇಖರಿಸಿಟ್ಟಿದ್ದ ಆಂಧ್ರಪ್ರದೇಶದ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಮಹಿಳೆಯರನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿ 30 ಲಕ್ಷ ಮೌಲ್ಯದ 120 ವಿವಿಧ ಕಂಪನಿಯ ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
3
+ ಫೆ.7 ರಂದು ಬಸ್‍ನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರ ಒಬ್ಬರ ಮೊಬೈಲ್ ಫೋನ್ ಕಳವು ಆಗಿರುವ ಬಗ್ಗೆ ಮಹದೇವಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಆಂಧ್ರ ಪ್ರದೇಶ ಮೂಲದ ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಐದು ಮಂದಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದಾಗ ಮೊಬೈಲ್ ಪೋನ್‍ಗಳನ್ನು ಬಸ್‍ಗಳಲ್ಲಿ ಕಳವು ಮಾಡಿರುವುದಾಗಿ ಮಾಹಿತಿ ಮೇರೆಗೆ 30 ಲಕ್ಷ ಮೌಲ್ಯದ 120 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿ.ಯಾಗಿದ್ದಾರೆ.
4
+ ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ
5
+ ಈ ಐವರು ಮಹಿಳೆಯರು ಮುಖ್ಯವಾಗಿ ನಗರದ ಜನನಿಬಿಡ ಬಸ್ ನಿಲ್ದಾಣಗಳು ಹಾಗೂ ಜನಜಂಗುಳಿ ಇರುವ ದಿನಗಳಂದು ಹೆಚ್ಚು ಪ್ರಯಾಣಿಕರು ಇರುವ ಬಸ್‍ಗಳನ್ನು ಹತ್ತಿಕೊಂಡು ಬಸ್‍ಗಳಲ್ಲಿ ನೂಕು ನುಗ್ಗಲು ಉಂಟು ಮಾಡಿ, ಸಾರ್ವಜನಿಕರ ಬ್ಯಾಗ್ ಮತ್ತು ಜೇಬಿನಲ್ಲಿರುವ ಮೊಬೈಲ್‍ಗಳನ್ನು ಕಳ್ಳತನ ಮಾಡಿಕೊಂಡು, ಕದ್ದ ಮೊಬೈಲ್‍ಗಳನ್ನು ತಮ್ಮ ವಾಸದ ಮನೆಯಲ್ಲಿ ಶೇಖರಿಸಿಟ್ಟಿದ್ದರು.
6
+ ನಂತರ ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬನಿಗೆ ಈ ಮೊಬೈಲ್‍ಗಳನ್ನು ಮಾರಾಟ ಮಾಡುತ್ತಿದ್ದರು ಎಂಬುವುದು ತನಿಖೆಯಿಂದ ತಿಳಿದು ಬಂದಿರುತ್ತದೆ. ಆಂದ್ರ ಪ್ರದೇಶದ ವ್ಯಕ್ತಿ ಆಗಾಗ್ಗೆ ಬೆಂಗಳೂರಿಗೆ ಬಂದು ಒಂದು ಮೊಬೈಲ್‍ಗೆ ಕೇವಲ 2ರಿಂದ 3 ಸಾವಿರ ಕೊಟ್ಟು ಮೊಬೈಲ್‍ಗಳನ್ನು ತೆಗೆದುಕೊಂಡು ಆಂಧ್ರಪ್ರದೇಶಕ್ಕೆ ಹೋಗಿ ಅಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದು ತನಿಖೆಯಿಂದ ಗೊತ್ತಾಗಿದೆ.
7
+ ಬಸ್‍ಗಳಲ್ಲಿ ಪ್ರಯಾಣಿಸುವಾಗ ಯಾರಾದರೂ ಮೊಬೈಲ್ ಕಳೆದುಕೊಂಡಿದ್ದರೆ ಹೆದರದೆ ಧೈರ್ಯವಾಗಿ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಮೊಬೈಲ್ ನಂಬರ್ 9480801084, ಎಸಿಪಿ ವೈಟ್ ಫೀಲ್ಡ್ ಉಪ ವಿಭಾಗ ಮೊ.ನಂ. 9480801607 ಅಥವಾ ಪೊಲೀಸ್ ಇನ್ಸ್‍ಪೆಕ್ಟರ್ ಮೊ. 9480801230ರವರನ್ನು ನೇರವಾಗಿ ನಿರ್ಭಿತಿಯಿಂದ ಸಂಪರ್ಕಿಸಿ ದೂರು ನೀಡಬಹುದಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು.
8
+ ವಿದೇಶಿ ಡ್ರಗ್ ಪೆಡ್ಲರ್ ಬಂಧನ : 83 ಲಕ್ಷ ಮೌಲ್ಯದ ಗಾಂಜಾ ಜಪ್ತಿಬೆಂಗಳೂರು,ಫೆ.16-ವಿದ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ��ಂದು ನಂತರದ ದಿನಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್‍ನನ್ನು ಸಿಸಿಬಿ ಪೊಲೀಸರು ಬಂಧಿಸಿ 83.43 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡಕ್ಕೆ ದೊರೆತ ಖಚಿತ ಮಾಹಿತಿಯ ಮೇರೆಗೆ ಫೆ.13ರಂದು ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್‍ನನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
9
+ ಬಂಧಿತನಿಂದ ಸುಮಾರು 83.43 ಲಕ್ಷ ಮೌಲ್ಯದ 589 ಗ್ರಾಂ ಎಂಡಿಎಂಎ ಕ್ರಿಸ್ಟಲ್, 6 ಕೆಜಿ 385 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ ಒಂದು ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ವ್ಯಕ್ತಿಯು 2018 ನೇ ಸಾಲಿನಲ್ಲಿ ಸ್ಪೂಡೆಂಟ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ನಂತರದ ದಿನಗಳಲ್ಲಿ ಇತರೆ ಪೆಡ್ಲರ್‍ಗಳಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿಸಿ, ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದದ್ದು ವಿಚಾರಣೆಯಿಂದ ಗೊತ್ತಾಗಿದೆ.
10
+ ಈ ಆರೋಪಿಯು 2019ರಲ್ಲಿ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ವಿದೇಶಿ ಮಹಿಳೆ ಕೊಲೆ ಪ್ರಕರಣದ ಆರೋಪಿಯಾಗಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಈತನ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.ಉಪ ಪೊಲೀಸ್ ಆಯುಕ್ತರು (ಅಪರಾಧ-2), ಶ್ರೀನಿವಾಸಗೌಡ ಮಾರ್ಗದರ್ಶನದಲ್ಲಿ ಸಿಸಿಬಿಯ ಮಾದಕವಸ್ತು ನಿಗ್ರಹ ದಳದ ಸಹಾಯಕ ಪೊಲೀಸ್ ಆಯುಕ್ತರವರ ನೇತೃತ್ವದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿರುತ್ತಾರೆ.
11
+ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್, ನಿರಂತರ ನೀರಿನ ಸೌಲಭ್ಯ
12
+ ಇರಾನಿ ಗ್ಯಾಂಗ್‍ನ ಮೂವರ ಬಂಧನಬೆಂಗಳೂರು,ಫೆ.16- ದರೋಡೆ ಮತ್ತು ಮನೆ ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇರಾನಿ ಗ್ಯಾಂಗಿನ ಮೂವರು ಆರೋಪಿಗಳನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಆರೋಪಿಗಳು ಮನೆಗಳ್ಳತನ ಮತ್ತು ದರೋಡೆ ಮಾಡಿದ್ದ ಚಿನ್ನದ ಒಡವೆಗಳನ್ನು ಕುರುಬರಹಳ್ಳಿಯ ಜ್ಯುವೆಲ್ಲರಿ ಅಂಗಡಿಯೊಂದರ ಬಳಿ ಹೋಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆಭರಣಗಳ ಬಗ್ಗೆ ವಿಚಾರಿಸಿದಾಗ ಸರಿಯಾದ ಮಾಹಿತಿ ನೀಡದ ಕಾರಣ ಮಾಲಿನ ಸಮೇತ ಬಂಧಿಸಿದ್ದಾರೆ.
13
+ ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.ಆರೋಪಿಗಳ ಬಂಧನದಿಂದ ಜಾಲಹಳ್ಳಿ ಹಾಗೂ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಕ���ವು ಪ್ರಕರಣ ಹಾಗೂ ನಂದಿನಿ ಲೇಔಟ್ ಪೊಲೀಸ್ ಠಾಣೆಯ ಸರಗಳ್ಳತನ ಪ್ರಕರಣ ಸೇರಿ ಒಟ್ಟು 3 ಪ್ರಕರಣಗಳು ಪತ್ತೆಯಾಗಿವೆ. ಇನ್ಸ್‍ಪೆಕ್ಟರ್ ಮಂಜು ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು.
eesanje/url_46_234_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನಾಯಕತ್ವದ ಬದಲಾವಣೆ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ : ಡಿ.ಕೆ.ಸುರೇಶ್
2
+ ಬೆಂಗಳೂರು,ಫೆ.17- ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ನಾಯಕತ್ವದ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲೋಕಸಭೆ ಚುನಾವಣೆ ಬಳಿಕವೂ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರಲಿದೆ.
3
+ ಮಹಾರಾಷ್ಟ್ರದಂತೆ ಇಲ್ಲಿ ಅಜಿತ್ ಪವಾರ್ ಆಗಲಿ, ಅಶೋಕ್ ಚೌವ್ಹಾಣ್ ಆಗಲಿ ಕಂಡುಬರುವುದಿಲ್ಲ, ಅಂತಹ ಸಾಧ್ಯತೆಯೂ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಅವಧಿಯನ್ನು ಪೂರ್ಣಗೊಳಿಸುತ್ತದೆ. ಮತ್ತೆ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.ರಾಜ್ಯದ ಜನ ಕಾಂಗ್ರೆಸ್‍ಗೆ 135 ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದೇವೆ. ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಮುಖರಾದ ರಾಹುಲ್‍ಗಾಂಧಿ, ಸೋನಿಯಾಗಾಂಧಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
4
+ ವಿರೋಧಪಕ್ಷಗಳ ನಾಯಕರಿಗೆ ಅಧಿಕಾರ ಕಳೆದುಕೊಂಡು ನಿದ್ರೆ ಬರುತ್ತಿಲ್ಲ. ಅದಕ್ಕಾಗಿ ದಿನ ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ, ಸಿಡಿ ಬಿಡುಗಡೆ ಎಂದೆಲ್ಲಾ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ, ಸರ್ಕಾರ ಪತನವಾಗಲಿದೆ ಎಂಬ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜೆಡಿಎಸ್-ಬಿಜೆಪಿಯಲ್ಲಿ ಚಲನಚಿತ್ರ ನಿರ್ಮಾಪಕರು ಹೆಚ್ಚಾಗಿದ್ದಾರೆ. ನಿರ್ದೇಶಕರು, ಕಥೆ ಬರೆಯುವವರ ಪ್ರಮಾಣವೂ ಹೆಚ್ಚಾಗಿದೆ. ಅದಕ್ಕಾಗಿ ರಾಜಕೀಯವಾಗಿ ದಿನಕ್ಕೊಂದು ಹೊಸಹೊಸ ಕಥೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
5
+ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ದಾಖಲೆಯ ಮತದಾನ
6
+ ಕೇಂದ್ರ ಸರ್ಕಾರ ದೆಹಲಿಯಲ್ಲಿ ರೈತರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂದು ಎಲ್ಲರೂ ನೋಡಿದ್ದಾರೆ. ಪಾಕಿಸ್ತಾನ-ಭಾರತದ ಗಡಿಗಿಂತಲೂ ತೀವ್ರವಾಗಿ ಮುಳ್ಳಿನ ಬೇಲಿ ಹಾಕಿ ಅಶ್ರವಾಯು ಸಿಡಿಸಿ ರೈತರ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ. ಇದನ್ನು ಪ್ರತಿಯೊಬ್ಬರೂ ಗಮನಿಸುತ್ತಿದ್ದಾರೆ. ರೈತರು ನ್ಯಾಯಯುತ ಬೇಡಿಕೆಗಳನ್ನಿಡುತ್ತಿದ್ದಾರೆ ಅದನ್ನು ಈಡೇರಿಸುವ ಬದಲು ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಜನರಿಗಿರುವ ಪ್ರತಿಭಟನೆಯ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ದೂರಿದರು.
7
+ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸ್ರ್ಪಧಿಸುವುದಾದರೆ ಸ್ವಾಗತಿಸುತ್ತೇನೆ. ಈ ಹಿಂದೆ ಅವರು ಎರಡು ಬಾರಿ ಸಂಸದರಾಗಿದ���ದರು. ಅವರ ನಿರ್ಗಮನದ ಬಳಿಕ ನಾನು ಆಯ್ಕೆಯಾಗಿದ್ದೇನೆ. ನಮ್ಮ ಪಕ್ಷ ನನಗೆ ಮರಳಿ ಸ್ರ್ಪಸಲು ಸೂಚನೆ ನೀಡಿದರೆ ನಾನು ಚುನಾವಣೆಯನ್ನು ಎದುರಿಸಲು ಬೇಕಾದ ತಂತ್ರಗಾರಿಕೆಯನ್ನು ಸಿದ್ಧಮಾಡಿಕೊಳ್ಳುತ್ತೇನೆ. ಕುಮಾರಸ್ವಾಮಿಯವರ ಸ್ಪರ್ಧೆಯನ್ನು ನಾನು ಸವಾಲು ಎಂದು ಸ್ವೀಕರಿಸುತ್ತಿಲ್ಲ. ರಾಜಕೀಯ ಹೋರಾಟ ಎಂದು ಪರಿಗಣಿಸುವುದಾಗಿ ಹೇಳಿದರು.
8
+ ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ತೆರಿಗೆ ಅನ್ಯಾಯದ ಬಗ್ಗೆ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಹಾಗೆಂದು ನಾನು ದೇಶ ವಿಭಜನೆಯ ಮಾತುಗಳನ್ನಾಡಿಲ್ಲ. ತೆರಿಗೆ ಪಾಲಿನ ಅನ್ಯಾಯದ ಬಗ್ಗೆ ತಮಿಳುನಾಡಿನಲ್ಲಿ ಮೊದಲಿನಿಂದಲೂ ವಿರೋಧವಿದೆ. ಪ್ರಧಾನಿಯವರು ಪ್ರತಿನಿಧಿಸುತ್ತಾರೆ ಎಂಬ ಕಾರಣಕ್ಕೆ ಉತ್ತರ ಪ್ರದೇಶಕ್ಕೆ ಮತ್ತು ಪ್ರಧಾನಿಯವರ ತವರೂರು ಎಂಬ ಕಾರಣಕ್ಕೆ ಗುಜರಾತ್‍ಗೆ ಹೆಚ್ಚಿನ ಹಣ ಅನುದಾನ ಮತ್ತು ತೆರಿಗೆ ಪಾಲು ನೀಡಲಾಗುತ್ತಿದೆ. ಉತ್ತರಭಾರತದ ಮಧ್ಯಪ್ರದೇಶ, ಬಿಹಾರ ರಾಜ್ಯಗಳು ನಮಗಿಂತಲೂ ಹೆಚ್ಚಿನ ಹಣ ಪಡೆಯುತ್ತಿವೆ. ಇದರ ವಿರುದ್ಧ ಧ್ವನಿಯೆತ್ತುವುದು ಹೇಗೆ ದೇಶ ವಿರೋಧಿಯಾಗುತ್ತದೆ ಎಂದು ಪ್ರಶ್ನಿಸಿದರು.
9
+ ಬಿಬಿಎಂಪಿ ಕೇಳಿದ್ದು 8050 ಕೋಟಿ ರೂ. ಸಿಕ್ಕಿದ್ದು 3500 ಕೋಟಿ ರೂ
10
+ ಮಾಜಿ ಸಚಿವ ಈಶ್ವರಪ್ಪನವರು ಗುಂಡಿಕ್ಕಿ ಕೊಲ್ಲುವಂತೆ ನೀಡಿರುವ ಹೇಳಿಕೆ ಅವರ ಹಿಂಬಾಲಕರನ್ನು ಪ್ರಚೋದಿಸಿ ಅನಾಹುತವಾದರೆ ಬಡವರ ಮಕ್ಕಳು ತೊಂದರೆಗೆ ಸಿಲುಕುತ್ತಾರೆ, ಅದಕ್ಕಾಗಿ ನಾನೇ ನೇರವಾಗಿ ಈಶ್ವರಪ್ಪ ಅವರನ್ನು ಭೇಟಿ ಮಾಡುತ್ತೇನೆ. ನನಗೆ ಗುಂಡಿಕ್ಕುವುದರಿಂದ ಅಥವಾ ಎರಡೇಟು ಹೊಡೆಯುವುದರಿಂದ ಈಶ್ವರಪ್ಪ ಅವರಿಗೆ ಒಳ್ಳೆಯದಾಗುತ್ತದೆ. ರಾಜಕೀಯವಾಗಿ ನಿರುದ್ಯೋಗಿಯಾಗಿರುವ ಅವರಿಗೆ ರಾಜ್ಯಪಾಲರ ಹುದ್ದೆ ದೊರೆಯುತ್ತದೆ ಎಂದರೆ ನನಗೆ ಸಂತೋಷ ಎಂದು ಹೇಳಿದರು.
eesanje/url_46_234_3.txt ADDED
@@ -0,0 +1,5 @@
 
 
 
 
 
 
1
+ ರಾಜ್ಯಸಭೆ ಚುನಾವಣಾ ಕಣದಲ್ಲಿ ಐವರು ಅಭ್ಯರ್ಥಿಗಳು
2
+ ಬೆಂಗಳೂರು,ಫೆ.17- ವಿಧಾನಸಭೆಯಿಂದ ರಾಜ್ಯಸಭೆಗೆ ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕøತಗೊಂಡಿದ್ದು, ಐವರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದವಾಗಿವೆ. ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಕೆ.ಬಾಂಡೆಗೆ, ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಕೇನ್, ಜಿ.ಸಿ.ಚಂದ್ರಶೇಖರ್, ಡಾ.ಸಯ್ಯದ್ ನಾಸೀರ್ ಹುಸೇನ್ ಹಾಗೂ ಜೆಡಿಎಸ್ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರ ನಾಮಪತ್ರಗಳು ಮಾನ್ಯವಾಗಿವೆ.
3
+ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದ ಡಾ.ಕೆ.ಪದ್ಮರಾಜನ್ ಹಾಗೂ ಕೆಂಗನೂರು ಅವರ ನಾಮಪತ್ರಗಳು ತಿರಸ್ಕøತವಾಗಿವೆ. ನಿನ್ನೆ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಫೆ.20ರವರೆಗೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅಂದು ಸಂಜೆ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
4
+ 9 ಕಾರಿಡಾರ್‌ಗಳಲ್ಲಿ ಬಸ್ ಲೇನ್ ನಿರ್ಮಿಸಲು ಬಿಬಿಎಂಪಿ ನಿರ್ಧಾರ
5
+ ಮೂರು ರಾಜಕೀಯ ಪಕ್ಷಗಳಿಂದ ಐವರು ಅಭ್ಯರ್ಥಿಗಳು ಸ್ರ್ಪಧಿಸಿರುವುದರಿಂದ ಮತದಾನ ನಡೆಯುವುದು ಅನಿವಾರ್ಯವಾಗಿದೆ. ಫೆ.27ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಲಿದೆ. ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ. ಫೆ.29ರಂದು ರಾಜ್ಯಸಭೆ ಚುನಾವಣೆಯ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
eesanje/url_46_234_4.txt ADDED
@@ -0,0 +1,5 @@
 
 
 
 
 
 
1
+ ಮಹಿಳಾ ಕಾನ್‌ಸ್ಟೇಬಲ್ ನೇಣಿಗೆ ಶರಣು
2
+ ಕನಕಪುರ,ಫೆ.17- ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಕಾನ್ಸ್‍ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾರೊಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಹಾರೊಹಳ್ಳಿ ತಾಲೂಕಿನ ದ್ಯಾವಸಂದ್ರದ ನಿವಾಸಿ ಮಂಜುಶ್ರೀ(27) ಆತ್ಮಹತ್ಯೆ ಮಾಡಿ ಕೊಂಡಿರುವ ಕಾನ್ಸ್‍ಟೇಬಲ್. ಬೆಂಗಳೂರಿನ ಮೈಕೊ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಮಂಜುಶ್ರೀ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೆ ಶಿವಾಜಿನಗರ ಪೊಲೀಸ್ ಠಾಣೆಗೆ ಅವರನ್ನು ನಿಯೋಜಿಸಲಾಗಿತ್ತು.
3
+ ಪ್ರತಿದಿನ ದ್ಯಾವಸಂದ್ರದಿಂದ ಬೆಂಗಳೂರಿಗೆ ತೆರಳಿ ಕೆಲಸ ಮಾಡುತ್ತಿದ್ದ ಮಂಜುಶ್ರೀ ಅವರು ನಿನ್ನೆ ಎಂದಿನಂತೆ ಕರ್ತವ್ಯ ಮುಗಿಸಿಕೊಂಡು ರಾತ್ರಿ ಮನೆಗೆ ಬಂದಿದ್ದಾರೆ. ಇವರ ಪೋಷಕರು ಮನೆಯ ಹಿಂಭಾಗದಲ್ಲಿ ಕೆಲಸದಲ್ಲಿ ತೊಡಗಿದ್ದಾಗ ಮಂಜುಶ್ರೀ ರೂಂಗೆ ಹೋಗಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
4
+ ಮುಂದಿನ ಪೀಳಿಗೆಯ ಹೆಚ್-3 ರಾಕೆಟ್ ಉಡಾಯಿಸಿದ ಜಪಾನ್
5
+ ಕೆಲ ಸಮಯದ ಬಳಿಕ ಪೋಷಕರು ಮನೆಯೊಳಗೆ ಬಂದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸುದ್ದಿ ತಿಳಿದು ಹಾರೊಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಾರೊಹಳ್ಳಿ ಸರ್ಕಲ್ ಇನ್ಸ್‍ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ದಯಾನಂದ ಸಾಗರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_234_5.txt ADDED
@@ -0,0 +1,5 @@
 
 
 
 
 
 
1
+ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ದಾಖಲೆಯ ಮತದಾನ
2
+ ಬೆಂಗಳೂರು,ಫೆ.17- ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಶಾಂತಿಯುತ ಮತದಾನವಾಗಿದ್ದು, ಒಟ್ಟಾರೆ ಸುಮಾರು ಶೇ.86.38ರಷ್ಟು ಮತದಾನವಾಗಿದೆ. ಈ ಉಪಚುನಾವಣೆಯ ಮತ ಎಣಿಕೆಯು ಫೆ.20ರಂದು ನಡೆಯಲಿದೆ. ಅಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಬಿಬಿಎಂಪಿ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಈ ಚುನಾವಣೆಗೆ ಮತದಾನ ನಡೆದಿದ್ದು, ಈ ಬಾರಿ ದಾಖಲೆಯ ಪ್ರಮಾಣದ ಮತದಾನವಾಗಿದೆ.
3
+ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.83.97, ಬಿಬಿಎಂಪಿ ಕೇಂದ್ರದಲ್ಲಿ ಶೇ.83.19, ಬಿಬಿಎಂಪಿ ಉತ್ತರದಲ್ಲಿ ಶೇ.82.43, ಬಿಬಿಎಂಪಿ ದಕ್ಷಿಣದಲ್ಲಿ 82.51ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿಹೆಚ್ಚು ಶೇ.96.02ರಷ್ಟು ಮತದಾನವಾಗಿದ್ದರೆ, ರಾಮನಗರ ಜಿಲ್ಲೆಯಲ್ಲಿ ಶೇ.95.77ರಷ್ಟು ಮತದಾನವಾದ ವರದಿಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ, ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ ಸೇರಿದಂತೆ ಚುನಾವಣೆಗೆ 9 ಅಭ್ಯರ್ಥಿಗಳು ಸ್ರ್ಪಧಿಸಿದ್ದರು.
4
+ ಮುಂದಿನ ಪೀಳಿಗೆಯ ಹೆಚ್-3 ರಾಕೆಟ್ ಉಡಾಯಿಸಿದ ಜಪಾನ್
5
+ ಈ ಉಪಚುನಾವಣೆಯಲ್ಲಿ ಚುನಾಯಿತರಾಗುವ ಅಭ್ಯರ್ಥಿಯ ವಿಧಾನಪರಿಷತ್‍ನ ಸದಸ್ಯತ್ವದ ಅವಧಿ 2026ರ ನವೆಂಬರ್ 11ರವರೆಗೆ ಮಾತ್ರ ಇದೆ. ಕಳೆದ ಬಾರಿ ಚುನಾವಣೆಯಂತೆ ಈ ಬಾರಿಯೂ ರಂಗನಾಥ್ ಮತ್ತು ಪುಟ್ಟಣ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಮತದಾನ ಮುಗಿಯುತ್ತಿದ್ದಂತೆ ಈ ಇಬ್ಬರು ಅಭ್ಯರ್ಥಿಗಳ ಬೆಂಬಲಿಗರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
eesanje/url_46_234_6.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು
2
+ ಚನ್ನಪಟ್ಟಣ,ಫೆ.17- ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ಕೋಲೂರುಗೇಟ್ ಬಳಿ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೈಸೂರಿನ ಮೂವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಮೈಸೂರಿನ ನಿವಾಸಿಗಳಾದ ಸೋಮ ಲಿಂಗಪ್ಪ(70), ಸೋಮಣ್ಣ(68) ಮತ್ತು ರಾಜೇಶ್ವರಿ(50) ಮೃತ ದುರ್ದೈವಿಗಳು.
3
+ ಅಪಘಾ ತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಟಿಟಿ ವಾಹನದಲ್ಲಿ ಇವರೆಲ್ಲರೂ ಹಾವೇರಿಗೆ ಹೋಗಿ ಮದುವೆ ಮುಗಿಸಿಕೊಂಡು ಮೈಸೂರಿಗೆ ವಾಪಸಾಗುತ್ತಿದ್ದ ವೇಳೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಚನ್ನಪಟ್ಟಣ ತಾಲೂಕು ಕೋಲೂರು ಗೇಟ್ ಬಳಿ ಅತಿವೇಗವಾಗಿ ಬಂದ ಲಾರಿಯೊಂದು ಹಿಂದಿನಿಂದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
4
+ ಮುಂದಿನ ಪೀಳಿಗೆಯ ಹೆಚ್-3 ರಾಕೆಟ್ ಉಡಾಯಿಸಿದ ಜಪಾನ್
5
+ ಅಪಘಾತದಿಂದಾಗಿ ಈ ಮಾರ್ಗದ ಸಂಚಾರದಲ್ಲಿ ವಾಹನಗಳ ದಟ್ಟಣೆ ಉಂಟಾಗಿತ್ತು. ಸುದ್ದಿ ತಿಳಿದು ಸಿಪಿಐ ರವಿಕಿರಣ್ ಅವರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
eesanje/url_46_234_7.txt ADDED
@@ -0,0 +1,5 @@
 
 
 
 
 
 
1
+ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಗೆ ಜಿವಾವಧಿ ಶಿಕ್ಷೆ
2
+ ಮಹಾರಾಜ್‍ಗಂಜ್, ಫೆ.17 (ಪಿಟಿಐ) ಹನ್ನೆರಡು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೈದ ಪ್ರಕರಣದಲ್ಲಿ ಅಪರಾಗಳೆಂದು ತೀರ್ಪು ನೀಡಿದ ಇಲ್ಲಿನ ನ್ಯಾಯಾಲಯವು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಿನೋದ್ ಸಿಂಗ್ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾೀಧಿಶ ವಿನಯ್ ಕುಮಾರ್ ಸಿಂಗ್ ಅವರ ನ್ಯಾಯಾಲಯವು ಐವರು ಪುರುಷರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ತಿಳಿಸಿದ್ದಾರೆ.
3
+ ಪಂಕಜ್ ಸಾಹ್ನಿ, ವಿವೇಕ್, ಗೋವಿಂದ್ ಚೌಹಾಣ್, ಸೋನು ಮತ್ತು ರಾಮ್ ನಾರಾಯಣ್ ರಾಜ್ಭರ್ ಅವರು ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. 2021 ರಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ತೀರ್ಪು ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪ್ರತಿ ಅಪರಾಧಿಗಳಿಗೆ 90,000 ರೂ.ಗಳ ದಂಡ ವಿಧಿಸಿದೆ.
4
+ ಹೂಡಿಕೆದಾರರ ದಾರಿದೀಪವಾಗುತ್ತಿದೆ ಭಾರತ
5
+ 2021 ರ ಜ.18ರಂದು ಉತ್ತರಪ್ರದೇಶದ ಮಹಾರಾಜ್‍ಗಂಜ್ ಜಿಲ್ಲೆಯ ಪುರೇಂದರ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಲಿಕ್‍ಗರ್ ಗ್ರಾಮದಲ್ಲಿ ಆರೋಪಿಗಳು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದರು.
eesanje/url_46_234_8.txt ADDED
@@ -0,0 +1,5 @@
 
 
 
 
 
 
1
+ ಬಿಬಿಎಂಪಿ ಕೇಳಿದ್ದು 8050 ಕೋಟಿ ರೂ. ಸಿಕ್ಕಿದ್ದು 3500 ಕೋಟಿ ರೂ
2
+ ಬೆಂಗಳೂರು,ಫೆ.17- ಬಿಬಿಎಂಪಿ ಅಧಿಕಾರಿಗಳು ಕೇಳಿದ್ದು 8050 ಕೋಟಿ ರೂ.ಗಳ ಅನುದಾನ ಆದರೆ, ಸರ್ಕಾರ ನೀಡಿರೋದು ಕೇವಲ 3500 ಕೋಟಿ ರೂ.ಗಳು ಮಾತ್ರ. ಹೌದು ರಾಜ್ಯ ಸರ್ಕಾರ ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಬಿಬಿಎಂಪಿಗೆ ಕೇವಲ 3,500 ಕೋಟಿ ರೂ.ಗಳ ಅನುದಾನ ಮಾತ್ರ ನೀಡಿದೆ.
3
+ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಬಿಬಿಎಂಪಿಗೆ 8050 ಕೋಟಿ ರೂ.ಗಳ ಅನುದಾನ ನೀಡುವಂತೆ ಅಧಿಕಾರಿಗಳು ಸರ್ಕಾರಕ್ಕೆ ಮಾಡಿಕೊಂಡಿರುವ ಮನವಿಗೆ ಸರ್ಕಾರ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದು ಅಂಕಿ ಅಂಶಗಳಿಂದ ಬಹಿರಂಗಗೊಂಡಿದೆ. 8050 ಕೋಟಿ ರೂ.ಗಳ ಅನುದಾನಕ್ಕೆ ಬೇಡಿಕೆ ಇಟ್ಟಿದ್ದರೂ ಸರ್ಕಾರ ಕಳೆದ ಬಾರಿಯಂತೆ ಈ ಬಾರಿಯೂ 3,500 ಕೋಟಿ ಅನುದಾನ ಮಾತ್ರ ಘೋಷಣೆ ಮಾಡಿದೆ.
4
+ ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಇಮ್ರಾನ್‍ ಖಾನ್ ಸಮ್ಮತಿ
5
+ ನಗರದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿರುವ 3 ಸಾವಿರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ 500 ಕೋಟಿ ಹೆಚ್ಚುವರಿ ಅನುದಾನ ನೀಡಲಾಗಿದೆ. 2024-2025 ರ ಸಾಲಿಗೆ ಒಟ್ಟು 3,500 ಕೋಟಿ ಅನುದಾನ ಹಾಗೂ 6 ಸಾವಿರ ಕೋಟಿ ಆದಾಯದ ಗುರಿ ನೀಡಲಾಗಿದೆ.
eesanje/url_46_234_9.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕೋಟಿ ಹಣಕ್ಕೆ ಅಪಹರಣ ನಾಟಕ : ಕಾರು ಚಾಲಕ, ರೌಡಿಗಳು ಸೇರಿ ಐವರ ಸೆರೆ
2
+ ಬೆಂಗಳೂರು,ಫೆ.16- ಕೆಲಸ ನೀಡಿದ್ದ ಮಹಿಳಾ ಉದ್ಯಮಿಯಿಂದಲೇ ಹಣ ದೋಚಲು ಅಪಹರಣ ನಾಟಕವಾಡಿದ್ದ ಕಾರು ಚಾಲಕ ಹಾಗೂ ಇಬ್ಬರು ರೌಡಿಗಳು ಸೇರಿ 5 ಮಂದಿಯನ್ನು 24 ಗಂಟೆಯೊಳಗೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಹೇಮಂತ್ ಕುಮಾರ್ (34), ಶ್ರೀನಿವಾಸ (40), ಮೋಹನ್ (39), ತೇಜಸ್ (25) ಹಾಗೂ ಕುಲದೀಪು (22) ಬಂಧಿತರು. ಬಂಧಿತರ ಪೈಕಿ ಶ್ರೀನಿವಾಸ್ ಮತ್ತು ಮೋಹನ್ ಹೆಸರು ಮಲ್ಲೇಶ್ವರಂ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದೆ.
3
+ ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೈಕೋಲೇಔಟ್, 1ನೇ ಕ್ರಾಸ್ ನಿವಾಸಿ ಮಹಿಳಾ ಉದ್ಯಮಿ ಲಕ್ಷ್ಮೀ ಎಂಬುವವರು ಸೀರಿಯಲ್ ಪ್ರೊಡಕ್ಷನ್ ಹೌಸ್ ವ್ಯವಹಾರ ಮಾಡಿಕೊಂಡಿರುತ್ತಾರೆ. ಈ ವ್ಯವಹಾರಕ್ಕೆ ತಮಗೆ ಪರಿಚಯವಿರುವ ಹೇಮಂತ್ ಕುಮಾರ್ ಅವರನ್ನು ಕಾರು ಚಾಲಕನಾಗಿ ತಮ್ಮ ಬಳಿ ನೇಮಕ ಮಾಡಿಕೊಂಡಿದ್ದರು.
4
+ ಈ ಮಹಿಳಾ ಉದ್ಯಮಿ ಮನೆಕಟ್ಟಲು ಒಂದು ಕೋಟಿ ಸಾಲ ಬ್ಯಾಂಕ್‍ನಿಂದ ಮಂಜೂರು ಆಗಿತ್ತು. ಈ ವಿಚಾರ ಅವರ ಕಾರು ಚಾಲಕ ಹೇಮಂತ್ ಹಾಗೂ ಮತ್ತೊಬ್ಬನಿಗೆ ಗೊತ್ತಾಗಿದೆ. ಈ ಇಬ್ಬರು ಸಹಾಯಕರು ಫೆ.12ರಂದು ಬೆಳಿಗ್ಗೆ 8.30ರ ಸಮಯದಲ್ಲಿ ಮೈಸೂರಿಗೆ ಕಾರ್ಯನಿಮಿತ್ತ ಹೋಗುವುದಾಗಿ ಮನೆಯಿಂದ ಅವರ ಕಾರನ್ನು ತೆಗೆದುಕೊಂಡು ಹೋಗಿದ್ದು, ಅದೇ ದಿನ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಕಾರು ಚಾಲಕ ತನ್ನ ಮೊಬೈಲ್‍ನಿಂದ ಲಕ್ಷ್ಮೀ ಅವರ ಮೊಬೈಲ್ ಗೆ ಕರೆ ಮಾಡಿ ಮಾತನಾಡಿದ್ದಾನೆ.
5
+ ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ
6
+ ಫೆ.13ರಂದು ಈ ಮಹಿಳಾ ಉದ್ಯಮಿ ಇಬ್ಬರು ಸಹಾಯಕರಿಗೆ ಕರೆ ಮಾಡಿದ್ದಾಗ ಅವರ ಮೊಬೈಲ್ ಸ್ವಿಚ್‍ಆಪ್ ಆಗಿರುವುದು ಕಂಡು ಬಂದಿದೆ. ಫೆ.14ರಂದು ಮಧ್ಯಾಹ್ನ ಸುಮಾರು 1.50ರ ಸಮಯದಲ್ಲಿ ಕಾರು ಚಾಲಕ ಅವರಿಗೆ ವಾಟ್ಸಾಪ್ ಕರೆ ಮಾಡಿ ಅಳುತ್ತಾ ನಮ್ಮಿಬ್ಬರನ್ನು ಯಾರೋ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಸುತ್ತಾಡಿಸುತ್ತಿದ್ದಾರೆಂದು ತಿಳಿಸಿರುತ್ತಾರೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಲಕ್ಷ್ಮೀಯವರಿಗೆ ಕರೆಮಾಡಿ, ನಿಮ್ಮ ಹುಡುಗರು ಬೇಕೆಂದರೆ 1 ಕೋಟಿ ಹಣವನ್ನು ಸಂಜೆಯೊಳಗೆ ನೀಡಬೇಕು, ಇಲ್ಲವಾದರೆ ಅವರಿಬ್ಬರನ್ನು ಮುಗಿಸುತ್ತೇವೆಂದು ತಿಳಿಸಿ ಕರೆ ಸ್ಥಗಿತಗೊಳಿಸಿದ್ದಾರೆ.
7
+ ಇದರಿಂದ ಗಾಬರಿಯಾದ ಲಕ್ಷ್ಮೀ ಅವರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ಹೋಗಿ ತಮ್ಮ ಬಳಿ ಸಹಾಯಕರಾಗಿದ್ದ ಇಬ್ಬರು ಯುವಕರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಿದ್ದರು. ಪೊಲೀಸರು ಹಣಕ್ಕಾಗಿ ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು ಇನ್ಸ್‍ಪೆಕ್ಟರ್ ಅವರ ನೇತೃತ್ವದಲ್ಲಿ ಒಂದು ತಂಡವನ್ನು ರಚಿಸಿದ್ದರು.
8
+ ಈ ತಂಡವು ತಾಂತ್ರಿಕ ಮತ್ತು ಟೋಲ್‍ಗಳಲ್ಲಿರುವ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿ��ಿ, ಇದರ ಆಧಾರದ ಮೇರೆಗೆ ತನಿಖೆ ಕೈಗೊಂಡು ಪ್ರಕರಣ ದಾಖಲಾದ 24 ಗಂಟೆಯೊಳಗೆ ದೊಡ್ಡಬಳ್ಳಾಪುರ ಸಮೀಪದ ಚಿಕ್ಕ ಮಧುರೆ ಪಾರಂ ಹೌಸ್‍ನಲ್ಲಿಟ್ಟಿದ್ದ ಇಬ್ಬರನ್ನು ರಕ್ಷಿಸಿ ಕರೆ ತಂದು ತೀವ್ರ ವಿಚಾರಣೆಗೊಳಪಡಿಸಿದಾಗ, ಚಾಲಕನೇ ತನ್ನ ಸ್ನೇಹಿತ ಹಾಗೂ ಇನ್ನಿತರರೊಂದಿಗೆ ಸೇರಿಕೊಂಡು 1 ಕೋಟಿ ಆಸೆಗೆ ಬಿದ್ದು ಅಪಹರಣದ ನಾಟಕವಾಡಿರುವುದು ಬೆಳಕಿಗೆ ಬಂದಿದೆ.
9
+ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ಸವಲತ್ತು
10
+ ಈ ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿರುವ ವ್ಯಕ್ತಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಲಕ್ಷ್ಮೀ ಬಳಿ ಸಹಾಯಕರಾಗಿ ಕೆಲಸಕ್ಕಿದ್ದ ಕೆಲವು ವ್ಯಕ್ತಿಗಳು ಪೂರ್ವ ನಿಯೋಜಿತ ಯೋಜನೆಯನ್ನು ಮಾಡಿಕೊಂಡು, ಅಪಹರಣ ಎಸಗಿದ ಇಬ್ಬರು ರೌಡಿಗಳು ಹಾಗೂ ಇನ್ನಿತರರೊಂದಿಗೆ ಸೇರಿಕೊಂಡು ಈ ಕೃತ್ಯ ಮಾಡಿರುವುದುತನಿಖೆಯಿಂದ ಧೃಡಪಟ್ಟಿದ್ದು ತನಿಖೆ ಮುಂದುವರೆದಿದೆ.
11
+ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸೈದುಲ್ಲು ಅಡಾವತ್ ಮಾರ್ಗದರ್ಶನದಲ್ಲಿ, ಎಸಿಪಿ ಕೃಷ್ಣಮೂರ್ತಿ, ಇನ್ಸ್ ಪೆಕ್ಟರ್ ಮಂಜು ಅವರ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡಿತ್ತು.
eesanje/url_46_235_1.txt ADDED
@@ -0,0 +1,4 @@
 
 
 
 
 
1
+ ಶಿಕ್ಷಕರ ಉಪಚುನಾವಣೆಗೆ ಶಾಂತಿಯುತ ಮತದಾನ
2
+ ಬೆಂಗಳೂರು, ಫೆ.16- ವಿಧಾನ ಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದೆ. ಬೆಂಗಳೂರು ನಗರ, ಬಿಬಿಎಂಪಿ, ನಗರ ಮತ್ತು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ವ್ಯಾಪ್ತಿಗೆ ಇಂದು ಉಪಚುನಾವಣೆ ನಡೆಯಿತು. ಬೆಳಗ್ಗೆಯಿಂದಲೇ ಮತದಾರರಾಗಿರುವ ಶಿಕ್ಷಕರುಗಳು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಮಧ್ಯಾಹ್ನ ವೇಳೆಗೆ ಶೇ.50ರಷ್ಟು ಮತದಾನವಾಗಿತ್ತು.
3
+ ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ
4
+ ಉಪಚುನಾವಣೆಗೆ 19,172 ಶಿಕ್ಷಕರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದು , ಪುಟ್ಟಣ್ಣ ಅವರು ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಉಪಚುನಾವಣೆ ನಡೆಸಲಾಯಿತು. 2026ರ ನವೆಂಬರ್ 11ರವರೆಗೆ ಈ ಉಪಚುನಾವಣೆಯಲ್ಲಿ ಚುನಾಯಿತರಾಗುವ ಸದಸ್ಯರಿಗೆ ಅಕಾರವಿರಲಿದೆ. 20ರಂದು ಮತ ಎಣಿಕೆ ಕಾರ್ಯ ನಡೆಲಿದ್ದು , ಪ್ರಾಶ್ಯಸ್ತ ಮತಗಳು ಆಗಿರುವುದರಿಂದ ಅಂದೇ ಫಲಿತಾಂಶ ಬರುವುದು ಅಥವಾ ಎಣಿಕೆ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ.
eesanje/url_46_235_10.txt ADDED
@@ -0,0 +1,6 @@
 
 
 
 
 
 
 
1
+ 36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ
2
+ ಬೆಂಗಳೂರು, ಫೆ.16- ಇಡೀ ದೇಶದಲ್ಲಿ ರಾಜ್ಯದ ಸಾರಿಗೆ ಸೇವೆಗೆ ಉತ್ತಮ ಹೆಸರಿದ್ದು, ಅದನ್ನು ಮತ್ತಷ್ಟು ಉನ್ನತೀಕರಿಸುವ ದೃಷ್ಟಿಯಿಂದ ಉಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ ಅಂದಾಜು 36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ಹಾಗೂ ದೇವನಹಳ್ಳಿ ತುಮಕೂರಿನಲ್ಲಿ 10 ಕೋಟಿ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್‍ಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಯವರು ತಿಳಿಸಿದ್ದಾರೆ.
3
+ 2024-25ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳೊಳಗೆ ಜಾರಿಗೊಳಿಸಿದ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಬಹಳಷ್ಟು ಅನುಕೂಲವಾಗಿದೆ. ಈವರೆಗೆ 165 ಕೋಟಿ ಹೆಚ್ಚು ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದು, ಅದಕ್ಕೆ ಮೂರು ಸಾವಿರ ಕೋಟಿ ರೂ. ಒದಗಿಸಲಾಗಿದೆ ಎಂದರು.
4
+ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ
5
+ ಅರ್ಹತಾ ಪತ್ರ ನವೀಕರಣಕ್ಕೆ ಬರುವಂತಹ ಎಲ್ಲಾ ಸಾರಿಗೆ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗೀ ಸಹಭಾಗಿತ್ವದಲ್ಲಿ ಸ್ವಯಂ ಚಾಲಿತ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಸಾರಿಗೆ ಇಲಾಖೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣಕ್ಕಾಗಿ ಯೋಜನೆಯನ್ನು ಜಾರಿಗೊಳಿಸಲಾಗುವುದು.
6
+ ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ, ಬೆಳಗಾವಿ, ಮಂಗಳೂರು ಹಾಗೂ ಭಾಲ್ಕಿ ಕಚೇರಿಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.
eesanje/url_46_235_11.txt ADDED
@@ -0,0 +1,6 @@
 
 
 
 
 
 
 
1
+ ಪರಿಷ್ಕೃತ ಪ್ರವಾಸೋದ್ಯಮ ನೀತಿ ಜಾರಿ
2
+ ಬೆಂಗಳೂರು,ಫೆ.16- ರಾಜ್ಯದ ಆರ್ಥಿಕ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಗಳಿರುವ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿಯವರು ತಮ್ಮ ಬಜೆಟ್‍ನಲ್ಲಿ ಹೆಚ್ಚು ಗಮನ ಹರಿಸಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಲು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ 2024-29 ರ ಸಾಲಿಗೆ ಪರಿಷ್ಕøತ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ.
3
+ ಕೊಪ್ಪಳದ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲ ಪ್ರವಾಸಿ ಸೌಲಭ್ಯಗಳಿಗೆ 100 ಕೋಟಿ, ಜಲಾಶಯಗಳ ಹಿನ್ನೀರು, ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಸಾಹಸ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವುದು, ಸಾಹಸ ಪ್ರವಾಸೋದ್ಯಮ ವನ್ನು ಉತ್ತೇಜಿಸಲು 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಮತ್ತು ರೋಪ್ ವೇ ಸೌಲಭ್ಯ ಸೃಷ್ಟಿ ಮಾಡುವುದಾಗಿ ಘೋಷಿಸಿದ್ದಾರೆ.
4
+ ಗೋಕಾಕ್ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವ ಗುರಿಯನ್ನು ಪ್ರಕಟಿಸಿದ್ದು, ರಾಜ್ಯದ 530 ಸುರಕ್ಷಿತಾ ಸ್ಮಾರಕಗಳನ್ನು ತ್ರಿಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದ್ದು, ಡಿಜಿಟಲ್ ಮಾಹಿತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲಾಗುವುದು. ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲ್ಬುರ್ಗಿ ಜಿಲ್ಲೆಯ ಕಿತ್ತಾಪುರ ತಾಲೂಕಿನಲ್ಲಿ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವಶೇಷಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆಗೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದ್ದಾರೆ.
5
+ ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ
6
+ ಬೆಂಗಳೂರಿನ ಹೊರವಲಯದ ರೋರಿಚ್ ಮತ್ತು ದೇವಿಕರಾಣಿ ಎಸ್ಟೇಟ್ ಪ್ರದೇಶದಲ್ಲಿ ಮೂಲ ಸೌಲಭ್ಯಗಳ ಅಭಿವೃದ್ಧಿ, ಬಾಗಲಕೋಟೆಯ ಐಹೊಳೆಯಲ್ಲಿ ಕೆಎಸ್‍ಟಿಡಿಸಿಯಿಂದ ಸುಸಜ್ಜಿತ ಹೋಟೆಲ್ ನಿರ್ಮಾಣ, ಬೀದರ್, ವಿಜಯಪುರದಲ್ಲಿ ಕರೇಚ್ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಲು 15 ಕೋಟಿ ರೂ., ಬಂಡೀಪುರ, ದಾಂಡೇಲಿ, ಕಬಿನಿಯಲ್ಲಿ ಇಂಟರ್‍ಪ್ರಿಟೇಷನ್ ಸೆಂಟರ್‍ಗಳನ್ನು ನಿರ್ಮಾಣ ಮಾಡಲು 25 ಕೋಟಿ, ಗದಗ ಜಿಲ್ಲೆ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ, ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳನ್ನು ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.
eesanje/url_46_235_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮದ್ಯಪ್ರೀಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..!
2
+ ಬೆಂಗಳೂರು,ಫೆ.16- ಇಂದಿನ ಬಜೆಟ್‍ನಲ್ಲಿ ಮದ್ಯದ ಬೆಲೆಯನ್ನು ಪರಿಷ್ಕರಣೆ ಮಾಡಿ ಪಾನಪ್ರಿಯರು ಹಾಗೂ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಈ ಬಾರಿ ಮತ್ತೆ ಬೆಲೆ ಏರಿಕೆಯ ಮುನ್ಸೂಚನೆಯನ್ನು ನೀಡಿದ್ದಾರೆ. ವಿಧಾನಸಭೆಯಲ್ಲಿಂದು 2024-25ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿಯವರು ವಾಣಿಜ್ಯ ತೆರಿಗೆ, ನೋಂದಣಿ ಮುದ್ರಾಂಕ, ಅಬಕಾರಿ, ಸಾರಿಗೆ, ಗಣಿ ಮತ್ತು ಭೂ ವಿಜ್ಞಾನ ಸೇರಿ ಸಂಪನ್ಮೂಲ ಸಂಗ್ರಹ ಇಲಾಖೆಗಳಿಂದ ಒಟ್ಟು 1,96,525 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಿದ್ದಾರೆ.
3
+ ಮದ್ಯದ ಘೋಷಿತ ಸ್ಲಾಬ್‍ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆರಾಜ್ಯದ ಮದ್ಯದ ಬೆಳವಣಿಗೆಗನುಗುಣವಾಗಿ ದೇಶೀಯವಾಗಿ ತಯಾರಾಗುವ ಮದ್ಯ (ಐಎಂಎಲ್) ಮತ್ತು ಬಿಯರ್ಸ್ ಸ್ಲಾಬ್‍ಗಳನ್ನು ಪರಿಷ್ಕರಿಸುವುದಾಗಿ ತಿಳಿಸಿದ್ದಾರೆ. ನೆರೆರಾಜ್ಯಗಳಲ್ಲಿ ಕೆಲವು ಮದ್ಯ ಮಾರಾಟ ದರ ರಾಜ್ಯಕ್ಕಿಂತಲೂ ದುಬಾರಿಯಾಗಿದೆ. ಪರಿಷ್ಕರಣೆಗೊಂಡರೆ ಸಹಜವಾಗಿಯೇ ಅದು ಏರಿಕೆಯಾಗುವ ನಿರೀಕ್ಷೆಯಿದೆ.
4
+ ಪ್ರಸಕ್ತ ವರ್ಷ ನೋಂದಣಿ ಮತ್ತು ಮುದ್ರಾಂಕ ಹಾಗೂ ಮೋಟಾರು ವಾಹನಗಳ ತೆರಿಗೆಯನ್ನು ಪರಿಷ್ಕರಣೆ ಮಾಡಿರುವುದರಿಂದ ಈ ಬಜೆಟ್‍ನಲ್ಲಿ ಅಬಕಾರಿ ಹೊರತುಪಡಿಸಿ ಬೇರೆ ತೆರಿಗೆ ಹೊರೆ ಕಂಡುಬಂದಿಲ್ಲ. ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿಯವರು, ಇಲಾಖೆ ಒದಗಿಸುವ ವಿವಿಧ ಸೇವೆಗಳಿಗೆ ಸಮಯದ ಮಿತಿ ನಿಗದಿಪಡಿಸುವುದು, ಸ್ವಯಂಚಾಲಿತ ಅನುಮೋದನೆಗೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದಾರೆ. 2024 ರ ಜನವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 28,181 ಕೋಟಿ ರೂ.ಗಳು ಆದಾಯ ಸಂಗ್ರಹವಾಗಿದ್ದು, ಮುಂದಿನ ವರ್ಷ 38,225 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಲಾಗಿದೆ.
5
+ ಏನಿಲ್ಲ, ಏನಿಲ್ಲ..ಎಲ್ಲಾ ಸುಳ್ಳು : ಸಭಾತ್ಯಾಗ ಮಾಡಿದ ಪ್ರತಿಪಕ್ಷಗಳು
6
+ ಆದಾಯದ ಪ್ರಮುಖ ಮೂಲವಾಗಿರುವ ಸರಕು ಮತ್ತು ಸೇವಾ ತೆರಿಗೆಯಲ್ಲಿ 2024-25 ನೇ ಸಾಲಿಗೆ 1.10 ಲಕ್ಷ ಕೋಟಿ ರೂ.ಗಳ ಸಂಗ್ರಹದ ಗುರಿಯನ್ನು ನಿಗದಿ ಮಾಡಲಾಗಿದೆ. ಜನವರಿ ಅಂತ್ಯದವರೆಗೂ 58,180 ಕೋಟಿ ರೂ.ಗಳ ಎಸ್‍ಜಿಎಸ್‍ಟಿ ಸ್ವೀಕೃತವಾಗಿದ್ದು, ಕಳೆದ ವರ್ಷಕ್ಕಿಂತಲೂ ಶೇ.14 ರಷ್ಟು ಬೆಳವಣಿಗೆಯಾಗಿದೆ. ಪ್ರಸಕ್ತ ವರ್ಷ ಜಿಎಸ್ಟಿ ಮೇಲ್ಮನವಿ ನ್ಯಾಯ ಮಂಡಳಿಯ 2 ರಾಜ್ಯಪೀಠಗಳನ್ನು ರಚಿಸಿ ಕಾರ್ಯಗತಗೊಳಿಸುವ ಮೂಲಕ ತೆರಿಗೆ ವಿವಾದಗಳನ್ನು ಸ್ಥಳೀಯವಾಗಿ ಬಗೆಹರಿಸಲು ಆದ್ಯತೆ ನೀಡಲಾಗಿದೆ.
7
+ ಗ್ರಾಹಕ ಸಂವೇದಿ ಜಿಎಸ್‍ಟಿ ಡೇಟಾ ಬೇಸ್ ಮ್ಯಾನೇಜ್‍ಮೆಂಟ್ ಮತ್ತು ಕೃತಕ ಬುದ್ದಿಮತ್ತ ಚಾಲಿತ ವಿಶ್ಲೇಷಣಾತ್ಮಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿ ನಿಖರ ಮಾಹಿತಿ ಮುನ್ಸೂಚಕ ವಿಶ್ಲೇಷಣೆ ಮೂಲಕ ರಾಜಸ್ವ ಕೃಢೀಕರಣಕ್ಕೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಕಾರಿಗಳ ಪ���ಿಣಿತಿ ಹೆಚ್ಚಿಸಲು ಇ ತರಬೇತಿ ನೀಡಿ ಮೋಸದ ನೋಂದಣಿಗಳನ್ನು ಪತ್ತೆ ಹಚ್ಚುವುದು ಹಾಗೂ ರಾಜಸ್ವ ಸೃಜನೆಗೆ ಹೊಸ ಮಾರ್ಗಗಳನ್ನು ಅನ್ವೇಷಿಸಲು ಒತ್ತು ನೀಡುವುದಾಗಿ ತಿಳಿಸಿದ್ದಾರೆ.
8
+ ಕಂದಾಯ ಇಲಾಖೆ ಅೀನದ ನೋಂದಣಿ ಮತ್ತು ಮುದ್ರಾಂಕ ಶುಲ್ಕದಿಂದ 26 ಸಾವಿರ ಕೋಟಿ ರೂ.ಗಳ ಆದಾಯ ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ ಸ್ಥಿರಾಸ್ತಿ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗಿದ್ದು, ಜನವರಿ ಅಂತ್ಯದವರೆಗೆ 15,692 ಕೋಟಿ ರಾಜಸ್ವ ಸಂಗ್ರಹಣೆಯಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.10 ರಷ್ಟು ಬೆಳವಣಿಗೆಯಾಗಿದೆ. 2023-24 ನೇ ಸಾಲಿನಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆಯನ್ನು ಪರಿಷ್ಕರಣೆ ಮಾಡಿರುವುದರಿಂದ ಜನವರಿ ಅಂತ್ಯದವರೆಗೆ 9,333 ಕೋಟಿ ರೂ.ಗಳು ಸಂಗ್ರಹವಾಗಿದ್ದು, ಹಿಂದಿನ ಸಾಲಿಗಿಂತಲೂ ಶೇ.19 ರಷ್ಟು ಬೆಳವಣಿಗೆಯಾಗಿದೆ. ಮುಂದಿನ ವರ್ಷಕ್ಕೆ 13 ಸಾವಿರ ಕೋಟಿ ರೂ.ಗಳ ಆದಾಯದ ಗುರಿ ನಿಗದಿ ಮಾಡಲಾಗಿದೆ.
9
+ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ
10
+ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಶೇ.22 ರಷ್ಟು ಆದಾಯ ಹೆಚ್ಚಳವಾಗಿದೆ. ಜನವರಿ ಅಂತ್ಯಕ್ಕೆ 5,658 ಕೋಟಿ ರೂ.ಗಳು ಸಂಗ್ರಹವಾಗಿದ್ದು, ಮುಂದಿನ ವರ್ಷಕ್ಕೆ 9 ಸಾವಿರ ಕೋಟಿ ರೂ.ಗಳನ್ನು ನಿಗದಿ ಪಡಿಸಿದ್ದಾರೆ.
eesanje/url_46_235_2.txt ADDED
@@ -0,0 +1,7 @@
 
 
 
 
 
 
 
 
1
+ ಬಜೆಟ್‍ನಲ್ಲಿ ನಾಡಿನ ಅನ್ನದಾತರಿಗೆ ಸಿಹಿ ಸುದ್ದಿ
2
+ ಬೆಂಗಳೂರು,ಫೆ.16- ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ನಾಡಿನ ಅನ್ನದಾತರಿಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಂಘಗಳ ಮೂಲಕ ನೀಡುವ ಬಡ್ಡಿ ರಹಿತ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷದವರೆಗೆ ಏರಿಕೆ ಮಾಡಿದ್ದಾರೆ. ಜೊತೆಗೆ ಮಧ್ಯಮ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ವದ ತೀರ್ಮಾನವನ್ನು ಘೋಷಿಸಿದ್ದಾರೆ.
3
+ ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27 ಸಾವಿರ ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ 50 ಸಾವಿರ ರೂ.ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂ. ಬೆಳೆ ಸಾಲ ಮನ್ನ ಮಾಡಲಾಗಿತ್ತು . ಡಿಸಿಸಿ ಬ್ಯಾಂಕ್‍ಗಳಿಗೆ ಸುಮಾರು 132 ಕೋಟಿ ಬಿಡುಗಡೆಯಾಗದ ಪರಿಣಾಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಡಿಸಿಸಿ ಬ್ಯಾಂಕ್‍ಗಳಿಗೆ ಬಾಕಿ ಇರುವ 132 ಕೋಟಿ ಹಣವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
4
+ ಡಿಸಿಸಿ, ಮತ್ತು ಪಿಕಾರ್ಡ್ ಬ್ಯಾಂಕ್‍ಗಳ ಮಧ್ಯಮ ಅವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮಾಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಇದರಿಂದ ಒಟ್ಟು 57 ಸಾವಿರ ರೈತರು ಇದರ ಲಾಭವನ್ನು ಪಡೆಯಲಿದ್ದಾರೆ. ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕ್‍ಗಳಿಗೆ 496 ಕೋಟಿ ಸಾಲ ಮರುಪಾವತಿಯಾಗುವ ನಿರೀಕ್ಷೆಯಿದ್ದು, ಬ್ಯಾಂಕ್‍ಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ ಎಂಬ ಆಶಾಭಾವನೆಯನ್ನು ಅವರು ಇಟ್ಟುಕೊಂಡಿದ್ದಾರೆ.
5
+ ಯಾವ ಇಲಾಖೆಗೆ ಎಷ್ಟು ಅನುದಾನ..? : ಇಲ್ಲಿದೆ ಮಾಹಿತಿ
6
+ ಮಾಧ್ಯಮಿಕ ಫೆಡರಲ್ ಮತ್ತು ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಮಹಿಳೆಯರಿಗೆ ಮೀಸಲಾತಿ ತರಲು ಹಾಲಿ ಇರುವ ನಿಯಮಗಳಿಗೆ ತಿದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ, ಎಪಿಎಂಸಿಗಳಲ್ಲಿ 50 ಕೋಟಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ 40 ಕೋಟಿ ವೆಚ್ಚದಲ್ಲಿ ಶೀತಲ ಗೃಹಗಳನ್ನು ನಿರ್ಮಿಸುವುದಾಗಿ ಹೇಳಿದ್ದಾರೆ.
7
+ ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆಗಾಗಿ 25 ಕೋಟಿ, ರಾಣಿಬೆನ್ನೂರಿನಲ್ಲಿ 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 272 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಆರ್ಥಿಕವಾಗಿ ದುರ್ಬಲವಾಗಿರುವ ಮಾರುಕಟ್ಟೆ ಸಮಿತಿಗಳಿಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಕೆಯನ್ನು ಪಡೆಯುವ ಮೂಲಕ ಮಾರಕಟ್ಟ�� ಅಭಿವೃದ್ಧಿ ಸಹಾಯನಿಧಿ ಸ್ಥಾಪಿಸಲು ಕಾನೂನು ರಚನೆ ಜೊತೆಗೆ ಬೆಂಬಲ ಯೋಜನೆ ಜಾರಿಗೆ ತರುವ ಶಾಸನಾತ್ಮಕ ಬೆಂಬಲ ನೀಡಲು ಕ್ರಮ ಜರುಗಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ.
eesanje/url_46_235_3.txt ADDED
@@ -0,0 +1,6 @@
 
 
 
 
 
 
 
1
+ ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ
2
+ ಬೆಂಗಳೂರು,ಫೆ.16- ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶುಕ್ರವಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದು, ಕಾಮನ್ ವೆಲ್ತ್‍ಗೇಮ್‍ನಲ್ಲಿ ಪದಕ ಗೆದ್ದವರಿಗೂ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ.
3
+ ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 25 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 15 ಲಕ್ಷ ಬಹುಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಾಡಿಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲೂ ಶೇಕಡಾ 2 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಹೇಳಿದ್ದಾರೆ.
4
+ ಯಾವ ಇಲಾಖೆಗೆ ಎಷ್ಟು ಅನುದಾನ..? : ಇಲ್ಲಿದೆ ಮಾಹಿತಿ
5
+ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಮ ಸಮುಚ್ಛಯವ ಒಳಗೊಂಡ ಕ್ರೀಡಾ ನಗರವನ್ನು ಸಾರ್ವಜನಿಕರ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು. ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಒಟ್ಟಾರೆ 12 ಕೋಟಿ ರೂ. ಅನುದಾನ, ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ ಅಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
6
+ ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದಿಂದ ಒದಗಿಸಲಾವುದು, ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
eesanje/url_46_235_4.txt ADDED
@@ -0,0 +1,5 @@
 
 
 
 
 
 
1
+ ಸರ್ಕಾರಿ ನೌಕರರಿಗೆ ನಿರಾಸೆ
2
+ ಬೆಂಗಳೂರು,ಫೆ.16-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಸರ್ಕಾರಿ ನೌಕರರಿಗೆ ಮತ್ತೊಮ್ಮೆ ಮಧ್ಯಂತರ ಪರಿಹಾರದೊಂದಿಗೆ ವೇತನ ಪರಿಷ್ಕರಣೆಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರು 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಬಳಿಕ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.
3
+ ಆಡಳಿತ ಸುಧಾರಣೆ ನಿರಂತರ ಪ್ರಕ್ರಿಯೆಯಾಗಿದ್ದು, ಆಡಳಿತ ಸುಧಾರಣಾ ಆಯೋಗ 2ರಡಿ ಸ್ವೀಕರಿಸಲಾದ ಶಿಫಾರಸ್ಸುಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿ 7,214 ಸಂಸ್ಥೆಗಳ ಶಾಸನಬದ್ಧ ಸಂಸ್ಥೆಗಳ ಶಾಸನಬದ್ಧ ಲೆಕ್ಕ ಪರಿಶೋಧಕರಾಗಿರುತ್ತಾರೆ. ಇವುಗಳಲ್ಲಿ ಏಕರೂಪತೆ ತರಲು ಅಗತ್ಯ ತಿದ್ದುಪಡಿ ತರಲಾಗುವುದು ಎಂದಿದ್ದಾರೆ.
4
+ ಮಹಿಳೆಯರ ಸ್ವಾವಲಂಬನೆಗಾಗಿ ಕೆಫೆ ಸಂಜೀವಿನಿ
5
+ 2 ಜನಸ್ಪಂದನ ಕಾರ್ಯಕ್ರಮದಿಂದ 18 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಕಾಲಮಿತಿಯಲ್ಲಿ ಅವುಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
eesanje/url_46_235_5.txt ADDED
@@ -0,0 +1,6 @@
 
 
 
 
 
 
 
1
+ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ಸವಲತ್ತು
2
+ ಬೆಂಗಳೂರು,ಫೆ.16- ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಿಳಿಸಿದ್ದಾರೆ. ಮಾಜಿ ದೇವದಾಸಿಯರಿಗೆ ಪ್ರಸ್ತುತ ನೀಡುತ್ತಿರುವ 1500ರೂ ಮಾಸಾಶನವನ್ನು 2000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಬದುಕು ಉತ್ತಮ ಪಡಿಸಲು ಮೈತ್ರಿ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನ 800ರೂನಿಂದ 1200ರೂಗೆ ಹೆಚ್ಚಳ ಮಾಡುವುದಗಾಗಿ ಘೋಷಿಸಿದ್ದಾರೆ.
3
+ ವಸತಿ ರಹಿತ ದೇವದಾಸಿಯರಿಗೆ ರಾಜೀವ್ ಗಾಂ ವಸತಿರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ.20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತರಬೇತಿ ಆಯೋಜಿಸಲು 10 ಕೋಟಿ ಬಜೆಟ್?ನಲ್ಲಿ ಮೀಸಲಿಡಲಾಗಿದೆ. ಅಂಗನವಾಡಿ ಚಟವಟಿಕೆ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್ ಫೋನ್‍ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು.
4
+ ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ
5
+ ರಾಜ್ಯದಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗೆ ಸ್ವಂತ ಕಟ್ಟಡ ನಿರ್ಮಿಸಲು 200 ಕೋಟಿ ಅನುದಾನ ಘೋಷಿಸಲಾಗಿದೆ. ಸೆರೆಬ್ರಲಿ ಪಾಲ್ಸಿ, ಸ್ನಾಯುವಿನ ಸಂಕೋಚನ, ಪಾರ್ಕಿಸನ್, ಮಲ್ಟಿಪಲ್, ಸ್ಕೇಲೊರೊಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆಗೆ ಪ್ರತಿ ತಿಂಗಳು 1000ರ ಪ್ರೋತ್ಸಾಹ ಧನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು ಕ್ಯಾಟ್ರಕ್ಟ್ ಶಸ್ತ್ರ ಚಿಕಿತ್ಸೆ ಶಿಬಿರ ಆಯೋಜನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗೆ 86,423 ಕೋಟಿ ಮೀಸಲು ಇಡಲಾಗಿದೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 54,617 ಕೋಟಿ ಮೀಸಲಿರಿಸಲಾಗಿದೆ.
6
+ ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮಥ್ರ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.
eesanje/url_46_235_6.txt ADDED
@@ -0,0 +1,7 @@
 
 
 
 
 
 
 
 
1
+ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್, ನಿರಂತರ ನೀರಿನ ಸೌಲಭ್ಯ
2
+ ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯದಲ್ಲಿ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ 25 ಕೋಟಿ ರೂ. ಮೀಸಲಿಟ್ಟಿದ್ದಾರೆ. ಹಾಗೇ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೆ ನೀಟ್ ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮತ್ತು ಶಾಲಾ-ಕಾಲೇಜು ಕೊಠಡಿ, ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 850 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ.
3
+ ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಥ್ರ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ.
4
+ ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ
5
+ ಶೀಘ್ರದಲ್ಲೆ ಶಿಕ್ಷಕರು, ಉಪನ್ಯಾಸಕರ ನೇಮಕ:ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು, ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ ಅಥವಾ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ.
6
+ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಜೊತೆಗೆ ಸಿ.ಎಸ್.ಆರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುತ್ತದೆ.
7
+ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.
eesanje/url_46_235_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮಹಿಳೆಯರ ಸ್ವಾವಲಂಬನೆಗಾಗಿ ಕೆಫೆ ಸಂಜೀವಿನಿ
2
+ ಬೆಂಗಳೂರು,ಫೆ.16- ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚ ಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು.
3
+ ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿ ಕಿಯೋನಿಕ್ಸ್‍ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರ ಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆ ಎಂದರು. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
4
+ ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುವುದು. ಸ್ಥಳೀಯ ಮಹಿಳಾ ಸ್ವಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಹಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮಪಂಚಾಯ್ತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ ಜಿಪಿ-ಎಸ್‍ಎಚ್‍ಜಿ ಒಗ್ಗೂಡಿಸುವ ನೀತಿಯನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.
5
+ ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಹಾಗೂ ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯೋಗ ಅವಕಾಶಗಳನ್ನು ಒದಗಿಸಲು ಅನುಕೂಲವಾಗುವಂತೆ ರಾಜ್ಯ ಕೌಶಲ್ಯ ನೀತಿಯನ್ನು ಸಿದ್ದಪಡಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವ ಕೋರ್ಸ್‍ಗಳಲ್ಲಿ ವಿಷಯಾಧಾರಿತ ಉದ್ಯಮಶೀಲತೆ ಅಭಿವೃದ್ಧಿ ತರಬೇತಿಯನ್ನು 25 ಸಾವಿರ ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಹೇಳಿದರು.
6
+ 36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ
7
+ ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗ ಆಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರಲು ಯುವ ಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗದಲ್ಲೂ ಆಯೋಜಿಸಲಾಗುತ್ತದೆ ಎಂದು ಪ್ರಕಟಿಸಿದ್ದಾರೆ. ಕೈಗಾರಿಕೆ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ, ಜಿ���ಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.
8
+ ಮೊದಲ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಯಲ್ಲಿ ಅಂದಾಜು 120 ಕೋಟಿ ರೂ. ಅನುಷ್ಠಾನ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಯ ಮೂಲಕ ಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150 ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಪ್ರಾರಂಭ ಮಾಡುವುದಾಗಿ ತಿಳಿಸಿದ್ದಾರೆ.
9
+ ಮದ್ಯಪ್ರೀಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..!
10
+ ಎಲೆಕ್ಟ್ರಾನಿಕ್ಸ್ ಮತ್ತು ಕಮುನಿಕೇಷನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ , ಎಲೆಕ್ಟ್ರಾನಿಕ್ಸ್, ಎಂಜನಿಯರಿಂಗ್, ರೋಬೊಟೆಕ್ಸ್ ಇತ್ಯಾದಿ ಹೆಚ್ಚುವರಿ ಡಿಫ್ಲೋಮೊ ಕೋರ್ಸ್‍ಗಳನ್ನು ಜಿಟಿಟಿಸಿ ಮಾದರಿಯಲ್ಲಿ ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ 15 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕಲಬುರಗಿಯ ಕೆಜಿಟಿಟಿಐನಲ್ಲಿ ಸಿಎನ್‍ಸಿ ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಜೇಷ್ಠತಾ ಕೇಂದ್ರವನ್ನು 16 ಕೋಟಿ ವೆಚ್ಚದಲ್ಲಿ ಸ್ಥಾಪನೆ, ಐಟಿಐ ಜಿಟಿಟಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂಹನ ತರಬೇತಿಗೆ 5 ಕೋಟಿ ನೀಡಲಾಗುವುದು, ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರತಿಕ್ಷಣಾರ್ಥಿಗಲನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್‍ನ್ನು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
11
+ ಉದ್ಯೋಗ ಶೀಲತೆಯನ್ನು ಹೆಚ್ಚಿಸಲು ಡೂಯಲ್ ಸಿಸ್ಟಮ್ ಆಫ್ ಟ್ರೈನಿಂಗ್(ಡಿಎಸ್‍ಟಿ)ನ್ನು ರಾಜ್ಯದ ಎಲ್ಲಾ ಐಟಿಐಗಳಲ್ಲಿ ಕೈಗಾರಿಕೆಗಳು ಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂದಿದ್ದಾರೆ. ಒಂದು ಲಕ್ಷ ಮಹಿಳಾ ಸ್ವಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಟುಕ, ಕುರಿ, ಮೇಕೆ ಸಾಗಾಣಿಕೆ, ಜೇನು ಸಾಕಾಣಿಕೆ ಮತ್ತು ಕಿರು ಉದ್ಯಮ ಸ್ಥಾಪಿಸಲು 100 ಕೋಟಿ ವೆಚ್ಚ ಮಾಡುವುದಾಗಿ ಹೇಳಿದ್ದಾರೆ.
eesanje/url_46_235_8.txt ADDED
@@ -0,0 +1,3 @@
 
 
 
 
1
+ ಯಾವ ಇಲಾಖೆಗೆ ಎಷ್ಟು ಅನುದಾನ..? : ಇಲ್ಲಿದೆ ಮಾಹಿತಿ
2
+ ಬೆಂಗಳೂರು,ಫೆ.16- 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನ ಘೋಷಣೆ ಮಾಡಿದ್ದಾರೆ. ವಲಯವಾರು ವಿಂಗಡಣೆ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.
3
+ ಶಿಕ್ಷಣ – 44,422 ಕೋಟಿಮಹಿಳಾ ಮತ್ತು ಮಕ್ಕಳ ಇಲಾಖೆ -34,406 ಕೋಟಿಇಂಧನ – 23,159 ಕೋಟಿಗ್ರಾಮೀಣಾಭಿವೃದ್ಧಿ – 21,160 ಕೋಟಿಒಳಾಡಳಿತ/ಸಾರಿಗೆ – 19,777 ಕೋಟಿನೀರಾವರಿ – 19,179 ಕೋಟಿನಗರಾಭಿವೃದ್ಧಿ- 18,155 ಕೋಟಿಕಂದಾಯ- 16,170 ಕೋಟಿಆರೋಗ್ಯ – 15,145 ಕೋಟಿಸಮಾಜಕಲ್ಯಾಣ – 13,334 ಕೋಟಿಲೋಕೋಪಯೋಗಿ -10,424 ಕೋಟಿಆಹಾರ ಇಲಾಖೆ – 9963 ಕೋಟಿಕೃಷಿ , ತೋಟಗಾರಿಕೆ – 6,688 ಕೋಟಿಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿಇತರೆ- 1,24,593 ಕೋಟಿ.
eesanje/url_46_235_9.txt ADDED
@@ -0,0 +1,5 @@
 
 
 
 
 
 
1
+ ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ
2
+ ಬೆಂಗಳೂರು,ಫೆ.16- ಸಿಲಿಕಾನ್ ಸಿಟಿ ಬೆಂಗಳೂರಿನ ಮೇಲಿನ ಒತ್ತಡ ತಗ್ಗಿಸುವ ಉದ್ದೇಶದಿಂದ ರಾಜ್ಯದ ಇತರೆಡೆಗಳಲ್ಲಿ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಅವರು, 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
3
+ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆಜಿಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‍ಶಿಪ್‍ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
4
+ ಬಜೆಟ್ ನಲ್ಲಿ ಮುಸ್ಲಿಂ ಬಾಂಧವರಿಗೆ ಬಂಪರ್ ಕೊಡುಗೆ ನೀಡಿದ ಸಿದ್ದರಾಮಯ್ಯ
5
+ ಬೆಂಗಳೂರಿನ ಬಿಐಇಸಿಯಿಂದ ತುಮಕೂರಿನವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಯವರೆಗೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆ ವಿಸ್ತರಿಸುವ ಬಗ್ಗೆ ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು. ಮೈಸೂರಿನಲ್ಲಿ ಹೆಚ್ಚುತ್ತಿರುವ ಜನದಟ್ಟಣೆ ತಪ್ಪಿಸಲು ಪೆರಿಫೆರಲ್ ರಿಂಗ್ ರಸ್ತೆಯನ್ನು ಪಿಪಿಪಿ ಅಥವಾ ಟೌನ್ ಪ್ಲಾನಿಂಗ್ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು ಎಂದು ಅವರು ವಿವರಣೆ ನೀಡಿದ್ದಾರೆ.
eesanje/url_46_236_1.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ಬೆಂಗಳೂರನ್ನು ವಿಶ್ವದರ್ಜೆ ನಗರವನ್ನಾಗಿಸಲು ಸಿದ್ದು ಸಂಕಲ್ಪ
2
+ ಬೆಂಗಳೂರು, ಫೆ.9- ವಿಶ್ವದರ್ಜೆಯ ನಗರವನ್ನಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದು, ಬೆಂಗಳೂರು ಬ್ಯುಜಿನೆಸ್ ಕಾರಿಡಾರ್ ಸ್ಥಾಪಿಸುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಈ ಬಾರಿಯ ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದಾರೆ. ನಗರದ ಜನರ ಜೀವನ ಗುಣಮಟ್ಟ ಸುಧಾರಣೆ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ದಿಟ್ಟ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
3
+ ಸಂಪನ್ಮೂಲ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರಿಗೆ ಮತ್ತು ಸ್ವಚ್ಛ ಸುಂದರ ಬೆಂಗಳೂರು ನಿರ್ಮಾಣದ ಕಡೆ ಗಮನ ಹರಿಸುವುದಾಗಿ ಸಿದ್ದು ಭರವಸೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, 2023-24ನೆ ಸಾಲಿನಲ್ಲಿ 4300 ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ಮುನ್ನುಡಿ ಬರೆಯಲಾಗಿದೆ.
4
+ 2024-25ರಲ್ಲಿ ತೆರಿಗೆ ವ್ಯವಸ್ಥೆಯಲ್ಲಿನ ಸೋರಿಕೆ ತಡೆಗಟ್ಟುವ ಮೂಲಕ 6 ಸಾವಿರ ಕೋಟಿ ರೂ.ಗಳ ತೆರಿಗೆ ಸಂಗ್ರಹದ ನಿರೀಕ್ಷೆ ಹೊಂದಲಾಗಿದೆ ಎಂದು ಅವರು ವಿವರಿಸಿದರು. ಪ್ರಸಕ್ತ ಸಾಲಿನಿಂದ ಪರಿಷ್ಕøತ ಜಾಹೀರಾತು ನೀತಿ ಮತ್ತು ಪ್ರೀಮಿಯಂ ಎಫ್‍ಎಆರ್ ನೀತಿ ಜಾರಿಗೆ ತರುವ ಮೂಲಕ 2 ಸಾವಿರ ಕೋಟಿ ರೂ.ಗಳನ್ನು ತೆರಿಗೆಯೇತರ ಸಂಪನ್ಮೂಲ ಸಂಗ್ರಹದ ಗುರಿ ಹೊಂದಲಾಗಿದೆ.
5
+ ಬಿಬಿಎಂಪಿ ವ್ಯಾಪ್ತಿಯ ಎಲ್ಲ 20 ಲಕ್ಷ ಆಸ್ತಿಗಳ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25ನೆ ಸಾಲಿನಲ್ಲಿ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಿಕೊಡಲಾಗುವುದು. ಇದರ ಜತೆಗೆ ಸಂಗ್ರಹವಾಗುವ ಹೆಚ್ಚುವರಿ ಸಂಪನ್ಮೂಲಗಳಿಂದ ನಗರದ ಸಂಚಾರ ದಟ್ಟಣೆಯನ್ನು ನಿವಾರಿಸಲು ನಮ್ಮ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
6
+ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 147ಕಿಮೀ ಉದ್ದದ ರಸ್ತೆಗಳನ್ನು 1700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ರಸ್ತೆಗಳನ್ನಾಗಿ ಪರಿವರ್ತಿಸಲಾಗಿದೆ. ಈ ಎಲ್ಲ ಕಾಮಗಾರಿಗಳನ್ನು 2025ರ ವೇಳೆಗೆ ಪೂರ್ಣಗೊಳಿಸಲಾಗುವುದು. ರಸ್ತೆಗಳ ವಿಸ್ತರಣೆ ಕಷ್ಟಸಾಧ್ಯವಾಗಿರುವುದರಿಂದ ಸುರಂಗ ಮಾರ್ಗಗಳ ಮೂಲಕ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಲಾಗಿದ್ದು, ಈ ವರ್ಷ ಸಂಚಾರ ದಟ್ಟಣೆ ಹೆಚ್ಚಿರುವ ಹೆಬ್ಬಾಳ ಜಂಕ್ಷನ್‍ನಲ್ಲಿ ಪ್ರಾಯೋಗಿಕವಾಗಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.
7
+ ನಗರದ ನಾಲ್ಕು ಬಫರ್ ಝೋನ್‍ಗಳನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ ಹೊಸ ಪ���ಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನೂರು ಕಿಮೀ ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ ನೂರು ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.
8
+ ಸುಗಮ ಸಂಚಾರ-ಬ್ರಾಂಡ್ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಆ ಸಂಸ್ಥೆ ನೀಡುವ ವರದಿಯನ್ನಾಧರಿಸಿ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಯಾಗುವಂತೆ ನೋಡಿಕೊಳ್ಳಲು ಪೆರಿಫೆರಲ್ ರಿಂಗ್‍ರಸ್ತೆಗಳನ್ನು ಬೆಂಗಳೂರು ಬ್ಯುಜಿನೆಸ್ ಕಾರಿಡಾರ್ ಎಂಬ ಪರಿಕಲ್ಪನೆಯಲ್ಲಿ ಪರಿಚಯಿಸಲು ತೀರ್ಮಾನಿಸಲಾಗಿದೆ.ಈ ಯೋಜನೆಯಡಿ 73ಕಿಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಆರ್‍ಎಫ್‍ಪಿ ಕರೆಯಲಾಗಿದೆ ಎಂದು ಅವರು ತಿಳಿಸಿದರು.
9
+ ನಗರದಲ್ಲಿ 250 ಮೀಟರ್ ಎತ್ತರದ ಸ್ಕೈ ಡೆಕ್ ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದ ವಾಸ್ತು ವಿನ್ಯಾಸಗಾರರನ್ನು ಆಹ್ವಾನಿಸಲಾಗಿದೆ. ಇದರಿಂದ ನಗರದ ಒಳಗೆ ಪ್ರವಾಸಿ ತಾಣಗಳನ್ನುಅಭಿವೃದ್ಧಿಪಡಿಸಲು ಅನುಕೂಲವಾಗಲಿದೆ ಎಂದರು.
10
+ ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ
11
+ ಬಿಬಿಎಂಪಿ, ಬಿಎಂಆರ್‍ಸಿಎಲ್, ಜಲಮಂಡಳಿ ಮತ್ತು ಬಿಡಿಎ ವ್ಯಾಪ್ತಿಗಳಲ್ಲಿ ಪ್ರತಿ ತಿಂಗಳು ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್‍ಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ.ಬಿಎಂಟಿಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬರ್‍ಬನ್ ರೈಲು ಯೋಜನೆಗಳು ಸುಗಮ ಸಂಚಾರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿವೆ. ಈ ಎಲ್ಲ ಸಾರಿಗೆ ವ್ಯವಸ್ಥೆಗಳನ್ನು ಒಗ್ಗೂಡಿಸಿ ಸಮನ್ವಯದಿಂದ ಕಾರ್ಯಾಚರಣೆ ನಡೆಸುವಂತೆ ನೋಡಿಕೊಳ್ಳಲು ಆದ್ಯತೆ ನೀಡಲಾಗಿದೆ. ಈಗಿರುವ 74 ಕಿಮೀ ಉದ್ದದ ಮೆಟ್ರೋ ರೈಲು ಯೋಜನೆಯನ್ನು 2025ರ ವೇಳೆಗೆ ಹೆಚ್ಚುವರಿಯಾಗಿ 44ಕಿಮೀನಷ್ಟು ಸೇರ್ಪಡೆ ಮಾಡಲು ಆದ್ಯತೆ ನೀಡಲಾಗಿದೆ. ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ-ವಿಮಾನ ನಿಲ್ದಾಣದ ಮಾರ್ಗ 2026 ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು.
12
+ ಮೆಟ್ರೋ ಹಂತ-3ರಡಿ 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರದ ಅನುದಾನ ನಿರೀಕ್ಷೆ ಮಾಡಲಾಗಿದೆ. ಈ ಯೋಜನೆಯಡಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಕ್ರಿ ಸರ್ಕಲ್ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣದ ಕರಡು ಸಿದ್ಧಪಡಿಸಲಾಗುತ್ತಿದೆ ಎಂದು ಅವ���ು ತಿಳಿಸಿದರು.
13
+ ಮಂದಗತಿಯಲ್ಲಿ ಸಾಗುತ್ತಿದ್ದ ಉಪನಗರ ರೈಲು ಯೋಜನೆಯನ್ನು ಚುರುಕುಗೊಳಿಸಲಾಗಿದ್ದು, ಬಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್-2ರ ಕಾಮಗಾರಿಗಳನ್ನು ತ್ವರಿತಗೊಳಿಸಲಾಗಿದೆ. ಕಾರಿಡಾರ್-4ರಡಿ ಹೀಲಲಿಗೆಯಿಂದ ರಾಜಾನುಕುಂಟೆವರೆಗಿನ 46.2 ಕಿಮೀ ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಇದಕ್ಕಾಗಿ ಹಲವಾರು ವಿದೇಶಿ ಬ್ಯಾಂಕ್‍ಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಈ ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚುವರಿ ಅನುದಾನಕ್ಕಾಗಿ ಮನವಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.
14
+ ಬಿಎಂಟಿಸಿಗೆ ಮುಂದಿನ ದಿನಗಳಲ್ಲಿ 1334 ಹೊಸ ಎಲೆಕ್ಟ್ರಿಕ್ ಬಸ್‍ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್‍ಗಳನ್ನು ಸೇರ್ಪಡೆಗೊಳಿಸಲಾಗುವುದು. ಪ್ರಯಾಣಿಕರ ಹಿತದೃಷ್ಟಿಯಿಂದ ಮಹಿಳೆಯರ ಸುರಕ್ಷತೆಗಾಗಿ ವೆಹಿಕಲ್ ಟ್ರಾಕಿಂಗ್ ಮೊಬೈಲ್ ಆ್ಯಪ್ ಅನುಷ್ಠಾನಗೊಳಿಸಲಾಗುತ್ತಿದೆ. ಜಪಾನ್ ನೆರವಿನೊಂದಿಗೆ ನಗರದ ಪ್ರಮುಖ 28 ಜಂಕ್ಷನ್‍ಗಳಲ್ಲಿ ಏರಿಯಾ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಮ್‍ಗಳನ್ನು ಅಳವಡಿಸಲಾಗಿದೆ.ನಗರದ ಅಭಿವೃದ್ಧಿಜತೆಗೆ ನಾಗರಿಕರ ಜೀವನ ಗುಣಮಟ್ಟ ಸುಧಾರಣೆಗೆ ನಾವು ಆದ್ಯತೆ ನೀಡಿದ್ದು, ಉತ್ತಮ ಪರಿಸರ, ದಿನದ 24 ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ ನಿರ್ವಹಣೆಗೆ ಒತ್ತು ನೀಡಿದ್ದೇವೆ.
15
+ ಜಲಮಂಡಳಿಯಿಂದ 5550 ಕೋಟಿ ರೂ. ವೆಚ್ಚದಲ್ಲಿ 775 ಎಂಎಲ್‍ಡಿ ಸಾಮಥ್ರ್ಯದ ಕಾವೇರಿ 5ನೆ ಹಂತದ ಯೋಜನೆಯನ್ನು ಮೇ ತಿಂಗಳಿನಿಂದ ಆರಂಭಿಸುವ ಮೂಲಕ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಒಳಚರಂಡಿ ಮಾರ್ಗಗಳಲ್ಲಿ 228 ಕಿಮೀ ಉದ್ದದಲ್ಲಿ ಕೊಳವೆಯನ್ನು ಅಳವಡಿಸಿ 13 ಎಸ್‍ಟಿಪಿ ಘಟಕಗಳಿಂದ ನೂರು ಎಂಎಲ್‍ಡಿ ನೀರನ್ನು ಸಂಸ್ಕರಿಸಲು ಕ್ರಮ ಕೈಗೊಳ್ಳಲಾಗಿದೆ. 441 ಕೋಟಿ ರೂ. ವೆಚ್ಚದಲ್ಲಿ ಏಳು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಲಾಗುವುದು. ಪ್ರತಿನಿತ್ಯ 268 ಎಂಎಲ್‍ಡಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರು ಬಳಕೆಗೆ ಅವಕಾಶ ಕಲ್ಪಿಸಿಕೊಡಲಾಗುವುದು.
16
+ ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸೌಲಭ್ಯ ಕಲ್ಪಿಸಲು 200 ಕೋಟಿ ರೂ. ವೆಚ್ಚದಲ್ಲಿ ಎರಡನೆ ಹಂತದ ಕಾಮಗಾರಿ ಆರಂಭಿಸಲಾಗುವುದು. ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನು ಗುರುತಿಸಿ ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಲಾಗುವುದು.
17
+ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ
18
+ ನಗರದಲ್ಲಿ ಮರಗಳ ಗಣತಿ, ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ, ಕೆರೆ ಮತ್ತು ಉದ್ಯಾನವನಗಳ ಅಭಿವೃದ್ಧಿಯನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಹೆಚ್ಚಿಸಲು ಪ್ರತ್ಯೇಕ ನೀತಿ ಜಾರಿಗೊಳಿಸಲಾಗುವುದು. ಇದರ ಜತೆಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಸರ್ವಜ್ಞ ಉದ್ಯಾನವನ ಅಭಿವೃದ್ಧಿಪಡಿಸುತ್ತೇವೆ. ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಟಿಯಿಂದ ರಾತ್ರಿ ವೇಳೆಯ ವ್ಯಾಪಾರ-ವಹಿವಾಟು ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ 1 ಗಂಟೆವರೆಗೂ ವಿಸ್ತರಿಸಲು ಅನುಮತಿ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
eesanje/url_46_236_10.txt ADDED
@@ -0,0 +1,7 @@
 
 
 
 
 
 
 
 
1
+ ನಮ್ಮ ತಂತ್ರಗಾರಿಕೆ ಏನೆಂಬುದು ಫೆ.27ರಂದು ತಿಳಿಯಲಿದೆ : ಡಿಕೆಶಿ
2
+ ಬೆಂಗಳೂರು,ಫೆ.15- ರಾಜ್ಯಸಭೆ ಚುನಾವಣೆಯಲ್ಲಿ ನಾವು ಏನು ರಾಜಕಾರಣ ಮಾಡಬಹುದು ಎಂಬುದು ಫೆಬ್ರವರಿ 27ನೇ ತಾರೀಖು ಗೊತ್ತಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಒಗ್ಗಟ್ಟಿನ ಪ್ರದರ್ಶನವನ್ನು ನಾವು ಮಾಡುತ್ತೇವೆ. ರಾಜ್ಯಸಭೆ ಚುನಾವಣೆಗೆ ಫೆ.27ರಂದು ಮತದಾನ ನಡೆದು ಅಂದೇ ಮತದಾನ ಎಣಿಕೆಯಾಗಿ ಫಲಿತಾಂಶ ಹೊರಬರಲಿದೆ. ರಾಜಕಾರಣ ಏನು ಎಂಬುದನ್ನು ಅಲ್ಲಿಯವರೆಗೆ ನೋಡುತ್ತಾ ಇರಿ ಎಂದರು.
3
+ ವಿಧಾನಸಭೆ ಚುನಾವಣೆಯಲ್ಲಿ ವಿಫಲವಾಗಿರುವುದಕ್ಕೆ ಬಿಜೆಪಿ ಜೊತೆ ಹೋಗಿದ್ದು, ಎರಡು ಪಕ್ಷಗಳು ಒಟ್ಟಿಗೆ ಸೇರಿ ಹೊಸ ನಂಟಸ್ತಿಕೆ ಮಾಡುತ್ತಿವೆ. ಅಲ್ಲಿರುವಂತವರು ಅವರ ಆತ್ಮಸಾಕ್ಷಿ ಮತವನ್ನು ನಮಗೆ ಕೊಡುತ್ತಾರೆ ಎಂಬ ಭರವಸೆ ಇದೆ ಎಂದು ತಿಳಿಸಿದರು. ಮತದಾನದ ನಂತರ ಎಷ್ಟು ಮತಗಳು ಬರಲಿವೆ ಎಂಬುದನ್ನು ತಿಳಿಸುತ್ತೇವೆ ಎಂದರು.
4
+ ರಾಜ್ಯಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಜಯ್ ಮಕೇನ್ ಅವರ ಕುಟುಂಬ ತ್ಯಾಗ ಮಾಡಿದೆ. ದೇಶದ ಐಕ್ಯತೆ, ಶಾಂತಿಗಾಗಿ ಪ್ರಾಣ ತ್ಯಾಗ ಮಾಡಿದೆ. ವಿದ್ಯಾರ್ಥಿಯಿಂದಲೇ ಸಂಘಟನೆ ಮಾಡಿದ್ದಾರೆ. ನಮ್ಮ ಪಕ್ಷದ ಆಧಾರ ಸ್ತಂಭ ಅದಕ್ಕಾಗಿ ಬಹಳ ಸಂತೋಷದಿಂದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ ಎಂದರು.ಬಿಜೆಪಿ, ಜೆಡಿಎಸ್‍ನವರು ಈ ಹಿಂದೆ ಹೊರಗಿನವರನ್ನು ಕರೆತಂದು ಸ್ಪರ್ಧೆಗಿಳಿಸಿದ್ದರಲ್ಲ ಅದರ ಬಗ್ಗೆ ಅವರನ್ನೇ ಕೇಳಿ ಎಂದು ಹೇಳಿದರು.
5
+ ಲೋಕಸಭಾ ಚುನಾವಣೆ : ಬೆಂಗಳೂರಿನಿಂದ ರಾಜೀವ್ ಚಂದ್ರಶೇಖರ್ ಸ್ಪರ್ಧೆ..?
6
+ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿ ರಾಜ್ಯಸಭೆಗೆ ಹೋಗಿ ರಾಜ್ಯಕ್ಕೆ ನ್ಯಾಯ ಒದಗಿಸಿದ್ದಾರೆ ಎಂದರು. ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ಅವರು ಸ್ಪರ್ಧೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಪ್ರಯತ್ನವನ್ನು ಅವರು ಮಾಡಲಿ ನಮ್ಮ ಪ್ರಯತ್ನವನ್ನು ನಾವು ಮಾಡುತ್ತೇವೆ ಎಂದು ಹೇಳಿದರು.
7
+ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಲು ಎಷ್ಟು ಮತಗಳು ಬೇಕೋ ಅಷ್ಟು ಮತಗಳು ನಮ್ಮ ಬಳಿ ಇವೆ. ಬಿಜೆಪಿ-ಜೆಡಿಎಸ್‍ನಿಂದ 2ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.
eesanje/url_46_236_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024ಕ್ಕೆ ವಿಧಾನಸಭೆ ಅಂಗೀಕಾರ
2
+ ಬೆಂಗಳೂರು, ಫೆ.15- ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024 ಇಂದು ಕರ್ನಾಟಕ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿತು. ವಿಧಾನಸಭೆಯಲ್ಲಿ ವಿಧೇಯಕ ಕುರಿತು ಮಾತನಾಡಿದ ಸಚಿವ ಶಿವರಾಜ ತಂಗಡಗಿ ಅವರು, ವಿಧೇಯಕದ 17ನೆ ಪ್ರಕರಣದಲ್ಲಿ (06) ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು.
3
+ ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯ ಮಾಡಲಾಗಿದೆ. ಶೇ.40ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸಬಹುದಾಗಿದೆ. ಈ ಹಿಂದೆ ಇದನ್ನು ಶೇ.50:50 ಎಂದು ಆದೇಶ ಹೊರಡಿಸಲಾಗಿತ್ತು ಎಂದು ವಿವರಿಸಿದರು. ಇದಲ್ಲದೆ, ವಿಧೇಯಕದ 07 (02) ರಲ್ಲಿ ಜಾರಿ ಸಮಿತಿಯಲ್ಲಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರನ್ನು ಸಂಚಾಲಕರೆಂದು ಯೋಜಿಸಲಾಗಿತ್ತು. ಆದರೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಿಗೆ ಸಾಕಷ್ಟು ಹೊಣೆಗಾರಿಕೆಗಳಿದ್ದು, ಸಂಚಾಲಕರಾಗಿ ಕಾರ್ಯನಿರ್ವಹಿ ಸುವುದು ಕಷ್ಟವಾಗುವುದರಿಂದ ಅವರನ್ನು ಸದಸ್ಯರನ್ನಾಗಿ ಮಾಡಿ ಕಾರ್ಯದರ್ಶಿ, ಕನ್ನಡ ಅಭಿವೃದ್ಧಿ ಪ್ರಾಕಾರ ಇವರನ್ನು ಸಂಚಾಲಕರನ್ನಾಗಿ ಪ್ರತಿಯೋಜಿಸ ಲಾಗುತ್ತಿದೆ ಎಂದು ತಿಳಿಸಿದರು.
4
+ ಯುವತಿಯ ಫೋಟೋ ಬಳಸಿಕೊಂಡು ಜೈಲಿನಿಂದಲೇ ರೌಡಿ ಬ್ಲಾಕ್‍ಮೇಲ್
5
+ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಈ ತಿದ್ದುಪಡಿ ವಿಧೇಯಕವನ್ನು ನಾನು ಸ್ವಾಗತಿಸುತ್ತೇನೆ. ಆದರೆ, ನನಗೆ ಇರುವ ಆತಂಕವೇನೆಂದರೆ, ಬಹುರಾಷ್ಟ್ರೀಯ ಕಂಪನಿಗಳು, ದೊಡ್ಡ ದೊಡ್ಡ ಮಾಲ್‍ಗಳು ಇವನ್ನು ಪಾಲಿಸುತ್ತವೆಯೇ? ದೊಡ್ಡ ಮೊತ್ತದ ದಂಡ ಹಾಕಿದಾಗ ಮಾತ್ರ ಅವು ಹೆದರುತ್ತವೆಯೇ ಹೊರತು ನೋಟಿಸ್‍ಗಳಿಗೆ ಹೆದರುವುದಿಲ್ಲ. ಆದ್ದರಿಂದ ನಿಯಮ ರೂಪಿಸುವಾಗ ಈ ಆದೇಶವನ್ನು ಪಾಲಿಸದ ಸಂಸ್ಥೆಗಳಿಗೆ ದೊಡ್ಡ ಮೊತ್ತದ ದಂಡ ಹಾಕಬೇಕು. ಸಾಧ್ಯವಾದರೆ ಪೊಲೀಸ್ ಅಧಿಕಾರಿಗಳು ಸಮಿತಿಯಲ್ಲಿರಲಿ ಎಂಬುದನ್ನು ಗಮನದಲ್ಲಿರಿಸಿಕೊಳ್ಳಿ ಎಂದರು.
6
+ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ, ಕನ್ನಡ ಭಾಷೆ ಬಳಕೆಗೆ ವಿಧೇಯಕವನ್ನು ಮಂಡನೆ ಸಂದರ್ಭ ಎದುರಾಗಿರುವುದು ಬೇಸರವುಂಟುಮಾಡಿದೆ. ನಮ್ಮ ಮನಸ್ಥಿತಿಗಳನ್ನು ಮೊದಲು ಬದಲಾಯಿಸಿಕೊಳ್ಳಬೇಕು. ಇತರ ಭಾಷಿಕರಿಗೆ ಬೆಂಗಳೂರಿನ ಬಗ್ಗೆ ಪ್ರೀತಿ ಇಲ್ಲ. ಆದರೆ, ವಾಸಿಸಲು ಮಾತ್ರ ಆಸೆ ಪಡುತ್ತಾರೆ. ಇಂತಹ ಮನಸ್ಥಿತಿ ಬದಲಾಗಬೇಕಿದೆ. ಇನ್ನು ಮುಂದಾದರೂ ಕನ್ನಡ ಭಾಷಾ ಅನುಷ್ಠಾನ ಸಮರ್ಪಕವಾಗಲಿ ಎಂದರು.
7
+ ಶಾಸಕ ಚಂದ್ರಕಾಂತ ಬೆಲ್ಲದ ಹಾಗೂ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಸಹ ತಿದ್ದುಪಡಿ ವಿಧೇಯಕ ಮಂಡನೆಯನ್ನು ಸ್ವಾಗತಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿಯವರು ಸದನದಲ್ಲಿ ಶಾಸಕರು ವ್ಯಕ್ತಪಡಿಸಿದ ಎಲ್ಲಾ ಅಭಿಪ್ರಾಯಗಳನ್ನು ಗೌರವಿಸುತ್ತೇನೆ ಹಾಗೂ ಅವರ ಸಲಹೆಗಳನ್ನು ನಿಯಮ ರೂಪಿಸುವಾಗ ಅಳವಡಿಸಿಕೊಳ್ಳುತ್ತೇವೆ ಎಂದರು.
8
+ ನಾವು ಈಗಾಗಲೇ ನಿಯಮ ರೂಪಿಸಲು ಒಂದು ಸಮಿತಿ ರಚನೆ ಮಾಡಿ, ಹಲವು ಸುತ್ತಿನ ಚರ್ಚೆಗಳನ್ನು ಮಾಡಿದ್ದೇವೆ. ಒಂದು ಜಾರಿ ಘಟಕ ಮಾಡಲಾಗುತ್ತದೆ. ಜಾರಿ ಅಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳು ಇದರಲ್ಲಿರುತ್ತಾರೆ. ಇವರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಜೊತೆಗೆ ದೊಡ್ಡ ಮಟ್ಟದ ದಂಡ ವಿಧಿಸಲು ನಿಯಮಗಳಲ್ಲಿ ಅವಕಾಶ ಮಾಡಲಾಗುತ್ತಿದೆ. ಒಂದು ವೇಳೆ ಆದೇಶಕ್ಕೆ ಗೌರವ ನೀಡದೇ ಹೋದರೆ ಅಂತಹ ಸಂಸ್ಥೆಗಳ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ತಿಳಿಸಿದರು.
9
+ ಪರಿಷತ್‍ನಲ್ಲಿ ತೆರಿಗೆ ಕೋಲಾಹಲ ; ಆಡಳಿತ ಪ್ರತಿಪಕ್ಷಗಳ ವಾಕ್ಸಮರ
10
+ ಬೆಂಗಳೂರೇ ದೊಡ್ಡ ಸಮಸ್ಯೆ – ಕನ್ನಡ ಅನುಷ್ಠಾನದಲ್ಲಿ ಬೆಂಗಳೂರೇ ಮೊದಲ ಸಮಸ್ಯೆ. ಬೆಂಗಳೂರಿನಲ್ಲಿ ಸಮರ್ಪಕವಾಗಿ ಕನ್ನಡ ಬಳಕೆಯಾದರೆ ರಾಜ್ಯದ ಇತರ ಭಾಗಗಳಲ್ಲಿ ಇದು ಸುಲಭವಾಗುತ್ತದೆ. ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಂಟೂ ವಲಯಗಳ ಆಯುಕ್ತರ ನೇತೃತ್ವದಲ್ಲಿ ಎಂಟು ಜಾರಿ ಸಮಿತಿಯನ್ನು ರಚಿಸಲಾಗುವುದು. ಅವರ ಮೂಲಕ ಕನ್ನಡ ಅನುಷ್ಠಾನದ ಬಗ್ಗೆ ಕಠಿಣ ಕ್ರಮವಹಿಸಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು.
eesanje/url_46_236_12.txt ADDED
@@ -0,0 +1,8 @@
 
 
 
 
 
 
 
 
 
1
+ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ`ಶಾಸಕರ ವೈರಲ್ ಆಡಿಯೋ’
2
+ ಬೆಂಗಳೂರು,ಫೆ.15- ಮಂಗಳೂರು ಭಾಗದಲ್ಲಿ ಶಾಸಕರ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರ ವಿಧಾನಸಭೆಯಲ್ಲಿಂದು ಪ್ರಸ್ತಾಪಗೊಂಡು ಕೋಲಾಹಲ ನಿರ್ಮಾಣವಾಯಿತು. ಪ್ರಶ್ನೋತ್ತರದ ಬಳಿಕ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ವಿಷಯ ಪ್ರಸ್ತಾಪಿಸಿ, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನನ್ನ ಮತ್ತು ಶಾಸಕ ವೇದವ್ಯಾಸ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.
3
+ ಸೆಂಟ್ ಥೆರೇಸಾ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗೆ ಹಿಂದೂ ಧರ್ಮದ ಬಗ್ಗೆ ಅಪನಂಬಿಕೆ ಬರುವಂತೆ ಮಾತುಗಳನ್ನು ಹೇಳಲಾಗಿದ್ದು, ಇದರ ಬಗ್ಗೆ ಪೋಷಕರು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ದೂರು ನೀಡಲು ಬಂದಿದ್ದರು. ಆ ವೇಳೆ ಶರಣ ಪಂಪವೇಲ್, ನಾನು, ಶಾಸಕ ವೇದವ್ಯಾಸ್ ಸ್ಥಳದಲ್ಲಿದ್ದೆವು. ಅಲ್ಲಿ ಡಿಡಿಪಿಐ ಕೂಡ ಇದ್ದರು. ಪೋಷಕರ ಬೇಡಿಕೆ ಆಧರಿಸಿ ಶಿಕ್ಷಕರ ವಿರುದ್ಧ ತನಿಖೆಗೆ ಆದೇಶಿಸಲಾಯಿತು. ನಾನು ಅಲ್ಲಿಂದ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರಿಗೆ ಪ್ರಯಾಣ ಮಾಡಿದ್ದೇನೆ. ನಂತರದ ಘಟನೆಗೆ ಸಂಬಂಧಪಟ್ಟಂತೆ ದೂರು ನೀಡಲಾಗಿದೆ. ಸ್ಥಳದಲ್ಲಿ ಇಲ್ಲದ ನನ್ನ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅದೇ ಕೋಮುವಾದಿ ಮಾತುಗಳನ್ನಾಡಿರುವ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಶಿಕ್ಷಕರ ಲೋಪವಿಲ್ಲ ಎಂದಾದರೆ, ಶಾಲಾ ಆಡಳಿತ ಮಂಡಳಿ ಶಿಕ್ಷಕರನ್ನು ಅಮಾನತುಗೊಳಿಸಿದ್ದು ಏಕೆ ಎಂದು ಪ್ರಶ್ನಿಸಿದರು.
4
+ ರಾಮ ಮಂದಿರಕ್ಕೆ 11ರೂ. ಕೋಟಿ ದೇಣಿಗೆ ನೀಡಿದ್ದ ಉದ್ಯಮಿಗೆ ರಾಜ್ಯಸಭಾ ಟಿಕೆಟ್
5
+ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್, ಎಫ್‍ಐಆರ್ ಹಾಕಿದಾಕ್ಷಣ ಯಾರೂ ಅಪರಾಯಾಗುವುದಿಲ್ಲ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ಸರ್ಕಾರದಿಂದ ಸೂಚನೆಗಳನ್ನು ನೀಡಲಾಗಿಲ್ಲ. ಮಂಗಳೂರಿನಲ್ಲಿ ಬಹಳ ಕೆಟ್ಟ ಪರಿಸ್ಥಿತಿಯನ್ನು ಸೃಷ್ಟಿಸಿದ್ದಾರೆ.
6
+ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮುವಾದ ಕೆರಳಿಸುವುದಷ್ಟೆ ಇವರ ಉದ್ದೇಶ ಎಂದು ಆಕ್ಷೇಪಿಸಿದರು. ಈ ಹಂತದಲ್ಲಿ ಬಿಜೆಪಿ ಸದಸ್ಯರು ಪ್ರತಿರೋಧ ವ್ಯಕ್ತಪಡಿಸಿ ಗದ್ದಲ ಎಬ್ಬಿಸಿದರು. ಸಚಿವ ಕೃಷ್ಣ ಭೈರೇಗೌಡ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪವಾಗಿದೆ. ಗೃಹಸಚಿವರಿಂದ ಉತ್ತರ ಕೊಡಿಸುತ್ತೇವೆ. ಇಲ್ಲಿ ಚರ್ಚೆ ಬೇಡ ಎಂದು ಹೇಳಿದರು. ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್, ಬರೀ ಉತ್ತರ ಸಾಲುವುದಿಲ್ಲ. ಈ ವಿಚಾರ ಚರ್ಚೆಯಾಗಬೇಕು ಎಂದರು.
7
+ ಬಿಜೆಪಿ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಕಣಕ್ಕೆ : ಹೆಚ್ಡಿಕೆ
8
+ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಶಾಸಕ ಸುನಿಲ್‍ಕುಮಾರ್ ಅವರು ದೂರು ಕೊಟ್ಟಾಕ್ಷಣಕ್ಕೆ ಯಾರು ಯಾರ ವಿರುದ್ಧವಾದರೂ ಎಫ್‍ಐಆರ್ ದಾಖಲಿಸಬಹುದೇ ಎಂದು ಆಕ್ಷೇಪಿಸಿದರು. ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಶಾಸಕ�� ವಿರುದ್ಧ ಎಫ್‍ಐಆರ್ ದಾಖಲಿಸಿದೆ ಎಂದು ಆರೋಪಿಸಿದರು. ಗೃಹಸಚಿವರ ಉತ್ತರದ ಬಳಿಕ ಉಳಿದ ವಿಚಾರ ಪ್ರಸ್ತಾಪ ಮಾಡುವುದು ಸೂಕ್ತ ಎಂದು ಸಭಾಧ್ಯಕ್ಷರು ಚರ್ಚೆಗೆ ತೆರೆ ಎಳೆದರು.
eesanje/url_46_236_2.txt ADDED
@@ -0,0 +1,7 @@
 
 
 
 
 
 
 
 
1
+ ಬಜೆಟ್ ನಲ್ಲಿ ಮುಸ್ಲಿಂ ಬಾಂಧವರಿಗೆ ಬಂಪರ್ ಕೊಡುಗೆ ನೀಡಿದ ಸಿದ್ದರಾಮಯ್ಯ
2
+ ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ, ರಾಜ್ಯದ ವಕ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಹಾಗೂ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಎಂಬ ಬಂಗಾರದ ಮನುಷ್ಯ ಸಿನಿಮಾ ಗೀತೆಯೊಂದಿಗೆ ಬಜೆಟ್ ಆರಂಭಿಸಿದ ಸಿದ್ದರಾಮಯ್ಯ, 2024ನೇ ಸಾಲಿನ ಪೂರ್ಣಾವ ಬಜೆಟ್‍ನಲ್ಲಿ ಅಲ್ಪಸಂಖ್ಯಾತರು ಹಾಗೂ ಕ್ರಿಶ್ಚಿಯನ್ ಸಮಯದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
3
+ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ., ರಾಜ್ಯದ ವಕ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ., ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ., ಜೈನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ ರೂ., ಬೀದರ್ ಶ್ರೀನಾನಕ್ ಝೀರಾ ಸಾಹೇಬ್ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ರೂ. ಘೋಷಿಸಿದ್ದಾರೆ.
4
+ ಅಲ್ಲದೇ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 100 ಸಂಖ್ಯಾಬಲವುಳ್ಳ 100 ಮೆಟ್ರಿಕ್, ಬಾಲಕ/ಬಾಲಕಿಯರ ಪ್ರಾರಂಭಿಸಲಾಗುವುದು. ನಂತರದ ವಿದ್ಯಾರ್ಥಿ ನಿಲಯಗಳನ್ನು, 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು. ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.
5
+ ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ
6
+ ಪ್ರಮುಖ ಘೋಷಣೆಗಳು:ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್‍ಎಫ್‍ಸಿ ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗಿದೆ. ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆಎಂಡಿಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗಿದೆ.
7
+ ವಕ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗಿದೆ. ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗಿದೆ.
eesanje/url_46_236_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ
2
+ ಬೆಂಗಳೂರು,ಫೆ.16- ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ ಅವರು, ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುತ್ತದೆ ಎಂದು ತಿಳಿಸಿದರು.
3
+ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ 350 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 350 ಕೋಟಿ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮಥ್ರ್ಯದ ನೆಪ್ರೊ ಯೂರಾಲಜಿ ಆಸ್ಪತ್ರೆ, 100 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು ಎಂದು ತಿಳಿಸಿದರು.
4
+ ಕಲಬುರಗಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ತಾಂತ್ರಿಕ ನೆರವಿನೊಂದಿಗೆ ಸ್ಥಾಪನೆ, ಗದಗ , ಕೊಪ್ಪಳ ಚಾಮರಾಜನಗರದಲ್ಲಿ 450 ಹಾಸಿಗೆ ಸಾಮಥ್ರ್ಯದ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಅನುದಾನ ಒದಗಿಸಿರುವುದಾಗಿ ಹೇಳಿದರು.
5
+ ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು
6
+ ಬೆಂಗಳೂರಿನ ನೆಪ್ರೊ ಯೂರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೊಟಿಕ್ ಯಂತ್ರದ ಮೂಲಕ ಉತ್ತಮ ಚಿಕಿತ್ಸೆ ನೀಡಲು ಕ್ರಮ. ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 ಮಾಡೂಲರ್ ಒಟಿಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
7
+ ಗದಗ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾಥ್ಲಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸಂಸ್ಥೆಗಳಲ್ಲಿ 64 ಅನೇಸ್ತೇಷಿಯಾ ವರ್ಕ್ ಸ್ಟೇಷನ್‍ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ, ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಹ್ಯೂಮನ್ ಮಿಲ್ಕ್ ಬ್ಯಾಂಕ್‍ಗಳನ್ನು ಇನ್ನು ಮುಂದೆ ಮೈಸೂರು ಮತ್ತು ಬಳ��ಳಾರಿ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು.
8
+ ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ
9
+ ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ , ಸೋಂಕುಗಳನ್ನು ಪತ್ತೆಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
10
+ ಇನ್ನು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆಆರ್ ಆಸ್ಪತ್ರೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡುವುದಾಗಿ ಅವರು ಹೇಳಿದ್ದಾರೆ.
eesanje/url_46_236_4.txt ADDED
@@ -0,0 +1,6 @@
 
 
 
 
 
 
 
1
+ ಏನಿಲ್ಲ, ಏನಿಲ್ಲ..ಎಲ್ಲಾ ಸುಳ್ಳು : ಸಭಾತ್ಯಾಗ ಮಾಡಿದ ಪ್ರತಿಪಕ್ಷಗಳು
2
+ ಬೆಂಗಳೂರು, ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ವಿಧಾನ ಸಭೆಯಲ್ಲಿ ಮಂಡಿಸುವಾಗ ಪ್ರತಿಪಕ್ಷ ಬಿಜೆಪಿ ಸದಸ್ಯರು ಬಜೆಟ್‍ನಲ್ಲಿ ಏನಿಲ್ಲ…. ಎಲ್ಲಾ ಸುಳ್ಳು ಎಂದು ಘೋಷಣೆ ಕೂಗಿ ಕೆಲಕಾಲ ಭಿತ್ತಿ ಪತ್ರ ಪ್ರದರ್ಶಿಸಿ ನಂತರ ಸಭಾತ್ಯಾಗ ಮಾಡಿದರು. ಜೆಡಿಎಸ್ ಸದಸ್ಯರು ಕೂಡ ಬಿಜೆಪಿ ಸದಸ್ಯರನ್ನು ಬೆಂಬಲಿಸಿ ಸಭಾತ್ಯಾಗ ಮಾಡಿ ಹೊರ ನಡೆದರು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡ ಕೂಡಲೇ ಬಿಜೆಪಿ ಶಾಸಕ ಸುನೀಲ್ ಕುಮಾರ್ ಏನಿಲ್ಲಾ… ಏನಿಲ್ಲಾ… ಎಂದು ಹೇಳಿದರು.
3
+ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಸದಸ್ಯರು ಆಕ್ಷೇಪವೆತ್ತಲು ಶುರುಮಾಡಿದರು. ಆಗ ಸಿಎಂ ಸಿದ್ದರಾಮಯ್ಯ ಅವರು ನಿಶಬ್ಧವಾಗಿರಲು ಹೇಳಿದರು. ನಂತರ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಅನುಮತಿಯಂತೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾರಂಭಿಸಿ, 15ನೇ ಹಣಕಾಸು ಆಯೋಗವು ಮಧ್ಯಂತರ ವರದಿ ಶಿಫಾರಸ್ಸಿನಂತೆ ರಾಜ್ಯಕ್ಕಾದ ಅನ್ಯಯ ಸರಿಪಡಿಸುವಲ್ಲಿ ಹಿಂದಿನ ಸರ್ಕಾರ ವಿಫಲವಾಯಿತು ಎಂದು ಹೇಳಿದರು.
4
+ ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು
5
+ ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆ ಹಂಚಿಕೆಯಲ್ಲಿ 62098 ಕೋಟಿ ರೂ. ನಷ್ಟವಾಗಿದೆ ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರೆಲ್ಲ ಎದ್ದು ನಿಂತು ಏನಿಲ್ಲಾ… ಏನಿಲ್ಲಾ.. ಬಜೆಟ್‍ನಲ್ಲಿ ಏನಿಲ್ಲಾ.. ರೈತ ವಿರೋಧಿ ಸಿದ್ದರಾಮಯ್ಯ, ಎಲ್ಲಾ ಸುಳ್ಳು ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ಬಿಜೆಪಿ ಸದಸ್ಯರ ಘೋಷಣೆ ಗದ್ದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿದರು.
6
+ ಬಿಜೆಪಿ ಸದಸ್ಯರು ಘೋಷಣೆ ಕೂಗುತ್ತಿದ್ದಾಗ ಜೆಡಿಎಸ್‍ನ ಸದಸ್ಯರು ಕೂಡ ಎದ್ದು ನಿಂತು ಬಿಜೆಪಿ ಸದಸ್ಯರನ್ನು ಬೆಂಬಲಿಸಿ ಸಭಾತ್ಯಾಗ ಮಾಡಿದರು. ಆದರೂ ವಿಚಲಿತರಾಗದ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣ ಮುಂದುವರೆಸಿದರು. ಮುಖ್ಯಮಂತ್ರಿ ಬಜೆಟ್ ಮಂಡಿಸುವಾಗ ಆಡಳಿತ ಪಕ್ಷದ ಶಾಸಕರು ಮೇಜು ಕುಟ್ಟಿ ಸ್ವಾಗತಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಆಡಳಿತ ಪಕ್ಷದ ಸದಸ್ಯರು ಕಾಂಗ್ರೆಸ್ ಪಕ್ಷದ ಶಾಲನ್ನು ಹಾಕಿದ್ದು ವಿಶೇಷವಾಗಿತ್ತು.