277dfbe943566349792ab9172b10d05e21a5a5a9e6387fa6d6248ffa8031a6ed
Browse files- eesanje/url_46_213_3.txt +7 -0
- eesanje/url_46_213_4.txt +5 -0
- eesanje/url_46_213_5.txt +10 -0
- eesanje/url_46_213_6.txt +4 -0
- eesanje/url_46_213_7.txt +7 -0
- eesanje/url_46_213_8.txt +9 -0
- eesanje/url_46_213_9.txt +4 -0
- eesanje/url_46_214_1.txt +10 -0
- eesanje/url_46_214_10.txt +5 -0
- eesanje/url_46_214_11.txt +10 -0
- eesanje/url_46_214_12.txt +13 -0
- eesanje/url_46_214_2.txt +7 -0
- eesanje/url_46_214_3.txt +6 -0
- eesanje/url_46_214_4.txt +7 -0
- eesanje/url_46_214_6.txt +5 -0
- eesanje/url_46_214_7.txt +9 -0
- eesanje/url_46_214_8.txt +7 -0
- eesanje/url_46_214_9.txt +11 -0
- eesanje/url_46_215_1.txt +7 -0
- eesanje/url_46_215_10.txt +7 -0
- eesanje/url_46_215_11.txt +8 -0
- eesanje/url_46_215_12.txt +8 -0
- eesanje/url_46_215_2.txt +5 -0
- eesanje/url_46_215_3.txt +4 -0
- eesanje/url_46_215_4.txt +6 -0
- eesanje/url_46_215_5.txt +5 -0
- eesanje/url_46_215_6.txt +5 -0
- eesanje/url_46_215_7.txt +4 -0
- eesanje/url_46_215_8.txt +9 -0
- eesanje/url_46_215_9.txt +4 -0
- eesanje/url_46_216_1.txt +7 -0
- eesanje/url_46_216_10.txt +5 -0
- eesanje/url_46_216_11.txt +7 -0
- eesanje/url_46_216_12.txt +7 -0
- eesanje/url_46_216_2.txt +9 -0
- eesanje/url_46_216_3.txt +5 -0
- eesanje/url_46_216_4.txt +8 -0
- eesanje/url_46_216_5.txt +8 -0
- eesanje/url_46_216_6.txt +4 -0
- eesanje/url_46_216_7.txt +8 -0
- eesanje/url_46_216_8.txt +6 -0
- eesanje/url_46_216_9.txt +7 -0
- eesanje/url_46_217_1.txt +6 -0
- eesanje/url_46_217_10.txt +4 -0
- eesanje/url_46_217_11.txt +4 -0
- eesanje/url_46_217_12.txt +7 -0
- eesanje/url_46_217_2.txt +4 -0
- eesanje/url_46_217_3.txt +4 -0
- eesanje/url_46_217_4.txt +5 -0
- eesanje/url_46_217_5.txt +7 -0
eesanje/url_46_213_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ಡಿಸಿಎಂಗೆ ಜೀವ ಬೆದರಿಕೆ ಹಾಕಿದ ಇ-ಮೇಲ್ ಮೂಲ ಶೋಧಕ್ಕೆ ಮುಂದಾದ ಪೊಲೀಸರು
|
2 |
+
ಬೆಂಗಳೂರು, ಮಾ.6- ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹಾಗೂ ಇತರರಿಗೆ ಬಂದಿರುವ ಜೀವ ಬೆದರಿಕೆ ಈಮೇಲ್ ಕರೆಯ ಬೆನ್ನು ಹತ್ತಿರುವ ನಗರ ಪೊಲೀಸರು ಈಮೇಲ್ ಮೂಲ ಶೋಸಲು ಮುಂದಾಗಿದ್ದಾರೆ.
|
3 |
+
ಈ ಕುರಿತಂತೆ ಸ್ವಿಜರ್ಲ್ಯಾಂಡ್ನಲ್ಲಿರುವ ಸಂಸ್ಥೆಗೆ ಪತ್ರ ಬರೆದು ಮಾಹಿತಿ ಕೋರಿರುವ ಪೊಲೀಸರು ಅಲ್ಲಿನ ಉತ್ತರಕ್ಕಾಗಿ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಶಾಹಿದ್ ಖಾನ್ ಎಂಬ ಹೆಸರಿನಲ್ಲಿ ಬಂದಿರುವ ಈ ಮೇಲ್ ವಿಷಯದ ಮಾಹಿತಿ ಕೋರಿ ಸ್ಟಿಜರ್ಲ್ಯಾಂಡ್ ಮೂಲದ ಎಂಡ್ ಟು ಎಂಡ್ ಎನ್ಕ್ರಿಪ್ಟೆಡ್ ಸಂಸ್ಥೆಗೆ ಪೊಲೀಸರು ಪತ್ರ ಬರೆದಿದ್ದಾರೆ.
|
4 |
+
ಈ ವ್ಯಕ್ತಿ ಪೊ್ರೀಟೊಮೇಲ್.ಕಾಮ್ ಮೂಲಕ ಈಮೇಲ್ ಮಾಡಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಆ ಸಂಸ್ಥೆಗೆ ಪೊಲೀಸರು ಪತ್ರ ಬರೆದು ಸಂಸ್ಥೆಯ ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಎಂಡ್ ಟು ಎಂಡ್ ಎನ್ಕ್ರಿಪ್ಟೆಡ್ ಇ ಮೇಲ್ ಸರ್ವಿಸ್ ನೀಡುವ ಸ್ಟಿಜರ್ಲ್ಯಾಂಡ್ ಮೂಲದ ಕಂಪನಿಯಾಗಿದ್ದು ಈ ವ್ಯಕ್ತಿ ಕಳುಹಿಸಿರುವ ಜೀವ ಬೆದರಿಕೆ ಕರೆಯ ಬಗ್ಗೆ ಅಗತ್ಯ ಮಾಹಿತಿ ನೀಡುವಂತೆ ಕೇಳಿಕೊಳ್ಳಲಾಗಿದೆ.
|
5 |
+
2013 ರಲ್ಲಿ ಸ್ವಿಜರ್ಲ್ಯಾಂಡ್ನ ಪ್ಲಾನ್ -ಲೆಸ್-ಔಟ್ಸ್ ರಸ್ತೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಎಂಡ್ ಟು ಎಂಡ್ ಸಂಸ್ಥೆ ಶೀಘ್ರದಲ್ಲೇ ಮಾಹಿತಿ ನೀಡುವ ಸಾಧ್ಯತೆ ಇದ್ದು, ಅಲ್ಲಿನ ಮಾಹಿತಿ ದೊರೆತ ನಂತರ ತನಿಖೆ ಚುರುಕುಗೊಳಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
|
6 |
+
ಏನಿದು ಜೀವಬೆದರಿಕೆ ಪ್ರಕರಣ:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ನಗರ ಪೊಲೀಸ್ ಆಯುಕ್ತ ದಯಾನಂದ ಸೇರಿದಂತೆ 10ಕ್ಕೂ ಹೆಚ್ಚು ಗಣ್ಯರನ್ನು ಬಾಂಬ್ ಇಟ್ಟು ಉಡಾಯಿಸುವುದಾಗಿ ಶಾಹಿದ್ ಖಾನ್ ಎಂಬ ಹೆಸರಿನಲ್ಲಿ ಜೀವ ಬೆದರಿಕೆ ಈಮೇಲ್ ಕಳುಹಿಸಿದ್ದ ಮಾತ್ರವಲ್ಲ, ಮುಂದಿನ ಶನಿವಾರ ನಗರದಲ್ಲಿ ಅಂಬಾರಿ ಉತ್ಸವ ಬಸ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಬಾಂಬ್ ಸೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ.
|
7 |
+
ರಾಮೇಶ್ವರಂ ಕೆಫೆ ಸೋಟ ಪ್ರಕರಣದ ಬೆನ್ನಲ್ಲೇ ಈ ವ್ಯಕ್ತಿ ಈಮೇಲ್ ಮಾಡಿ ರಾಮೇಶ್ವರಂ ಕೆಫೆ ಪ್ರಕರಣ ಕೇವಲ ಟ್ರಯಲ್ ಮುಂದಿದೆ ಮಾರಿ ಹಬ್ಬ ಎಂದು ಎಚ್ಚರಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
|
eesanje/url_46_213_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬಾಂಬ್ ಬೆದರಿಕೆ ಇ-ಮೇಲ್ : ಬೆಂಗಳೂರಿನಾದ್ಯಂತ ಹೈಅಲರ್ಟ್
|
2 |
+
ಬೆಂಗಳೂರು,ಮಾ.6- ಜನನಿಬಿಡ ಸ್ಥಳಗಳಲ್ಲಿ ಬಾಂಬ್ ಸೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ತಪಾಸಣೆಯನ್ನು ಚುರುಕುಗೊಳಿಸಿದೆ. ಲಗೇಜ್ ಬ್ಯಾಗ್ಗಳನ್ನು ಪೊಲೀಸರು ಖುದ್ದು ಪರಿಶೀಲನೆಗೊಳಪಡಿಸುತ್ತಿದ್ದು, ಸೋಟಕ ಪತ್ತೆ ಯಂತ್ರಗಳ ಮೂಲಕ ತಪಾಸಣೆ ನಡೆಸುತ್ತಿದ್ದಾರೆ.
|
3 |
+
ಅನುಮಾನ ಬಂದ ಕಡೆ ಬ್ಯಾಗ್ಗಳನ್ನು ಇಂಚಿಂಚೂ ಪರಿಶೀಲನೆಗೊಳಪಡಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇ-ಮೇಲ್ ಬಂದಿದ್ದು, ಅದರಲ್ಲಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಒಂದು ವೇಳೆ ಹಣ ನೀಡದೇ ನಿರ್ಲಕ್ಷಿಸಿದರೆ ಮುಂದಿನ ಹಂತದಲ್ಲಿ ಅಂಬಾರಿ ಉತ್ಸವ ಬಸ್ಗಳಲ್ಲಿ ಬಾಂಬ್ ಸೋಟ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.
|
4 |
+
ಜನನಿಬಿಡ ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡುವುದಾಗಿ ಬೆದರಿಕೆಯೊಡ್ಡಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಮುಂಜಾಗ್ರತಾ ಕ್ರಮ ವಹಿಸಲು ಪೊಲೀಸರಿಗೆ ಸೂಚನೆ ನೀಡಿದೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ಪ್ರತಿಯೊಂದು ಲಗೇಜ್ ಬ್ಯಾಗ್ಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ಅನುಮಾನಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ. ಬಸ್ಗಳಲ್ಲೂ ಕೂಡ ಅನಾಮಧೇಯ ಬ್ಯಾಗ್ಗಳನ್ನು ಪರಿಶೀಲಿಸಲಾಗುತ್ತಿದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
|
5 |
+
ನಗರದಲ್ಲಿ ಮಾ.1 ರಂದು ರಾಮೇಶ್ವರಂ ಕೆಫೆ ಸೋಟದ ಬಳಿಕ ಆತಂಕದ ವಾತಾವರಣ ನಿರ್ಮಾಣವಾಗಿದೆ.ಸೋಟಗೊಳಿಸಿದ ದುಷ್ಕøತ್ಯವೆಸಗಿದ ಆರೋಪಿಯನ್ನು ಪತ್ತೆ ಹಚ್ಚಲು 5 ದಿನ ಕಳೆದರೂ ಬಂಸಲಾಗಿಲ್ಲ. ಅತ್ಯಂತ ವ್ಯವಸ್ಥಿತವಾಗಿ ನಡೆದಿರುವ ಸೋಟ ಪ್ರಕರಣ ಪೊಲೀಸರಿಗಷ್ಟೇ ಅಲ್ಲ, ರಾಷ್ಟ್ರೀಯ ತನಿಖಾ ದಳಕ್ಕೂ ಸವಾಲಾಗಿದೆ.ಈ ನಡುವೆ ಕಳೆದ ನಾಲ್ಕು ದಿನಗಳ ಹಿಂದೆ ಪ್ರಮುಖರ ಕಚೇರಿಗಳಿಗೆ ಬಂದಿದ್ದ ಇ-ಮೇಲ್ ಬೆದರಿಕೆ ಮತ್ತಷ್ಟು ಆತಂಕವನ್ನು ಹುಟ್ಟುಹಾಕಿದೆ.
|
eesanje/url_46_213_5.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಬಾಂಬರ್ ಸುಳಿವು ನೀಡಿದವರೆಗೆ 10 ಲಕ್ಷ ಬಹುಮಾನ ಘೋಷಣೆ
|
2 |
+
ಬೆಂಗಳೂರು, ಮಾ.6- ನಗರದ ಐಟಿಪಿಎಲ್ ರಸ್ತೆಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ನೀಡಿದವರಿಗೆ ಹತ್ತು ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಘೋಷಿಸಿದೆ.
|
3 |
+
ಮಾರ್ಚ್ ಒಂದರಂದು ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ ಶಂಕಿತ ಆರೋಪಿಯ ಭಾವಚಿತ್ರ ಬಿಡುಗಡೆ ಮಾಡಿರುವ ಎನ್ಐಎ, ಆರೋಪಿಯನ್ನು ಬಂಧಿಸಲು ಅನುಕೂಲವಾಗುವ ಮಾಹಿತಿ ನೀಡಿದವರಿಗೆ ಈ ನಗದು ಬಹುಮಾನ ನೀಡುವುದಾಗಿ ಪ್ರಕಟಿಸಿದೆ.
|
4 |
+
ಅಲ್ಲದೆ, ಆರೋಪಿಯ ಬಗ್ಗೆ ಸುಳಿವು ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಹೇಳಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29510900, 8904241100, ಇ ಮೇಲ್: ..@. ಸಂಪರ್ಕಿಸಬಹುದಾಗಿದೆ ಎಂದು ಎನ್ಐಎ ಬಿಡುಗಡೆ ಮಾಡಿರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದೆ.
|
5 |
+
10 . .../F4kYophJFt
|
6 |
+
ಬಾಂಬರ್ ಪತ್ತೆಗೆ ಮ್ಯಾಪಿಂಗ್ :ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸೋಟಿಸಿ ಪರಾರಿಯಾಗಿರುವ ದುಷ್ಕರ್ಮಿಗಾಗಿ ಸಿಸಿಬಿ ಪೊಲೀಸ್ ತಂಡಗಳು ಮ್ಯಾಪಿಂಗ್ ಮಾಡಿ ಮಾಹಿತಿ ಕಲೆ ಹಾಕುತ್ತಿವೆ. ಸೋಟ ಸಂಭವಿಸಿ 5 ದಿನ ಕಳೆದರೂ ಆರೋಪಿಯ ಸುಳಿವು ಸಿಕ್ಕಿಲ್ಲ. ಆತನ ಪತ್ತೆಗಾಗಿ ಸಿಸಿಬಿ ಪೊಲೀಸ್ ತಂಡಗಳು ಹರಸಾಹಸಪಡುತ್ತಿವೆ. ವಿವಿಧ ಆಯಾಮಗಳಲ್ಲಿ ಆರೋಪಿಯ ಸುಳಿವಿಗಾಗಿ ಬೆನ್ನತ್ತಿರುವ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದು, ಆತನ ಪತ್ತೆಗಾಗಿ ಮ್ಯಾಪಿಂಗ್ ಮಾಡಿದ್ದಾರೆ.
|
7 |
+
ಆರೋಪಿಯು ಕೆಫೆಗೆ ಬಂದು ಹೋದ ಮಾರ್ಗಗಳಲ್ಲಿ ಹಾಗೂ ಕೆಫೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮ್ಯಾಪಿಂಗ್ ನಡೆಸಿದ್ದಾರೆ.ಆರೋಪಿಯು ಸ್ಥಳೀಯನೇ ಅಥವಾ ಹೊರರಾಜ್ಯದವನೇ, ಎಲ್ಲಿಂದ ಆತ ಪ್ರಯಾಣ ಆರಂಭಿಸಿದ, ಎಲ್ಲಿ ಪ್ರಯಾಣ ಕೊನೆಗೊಳಿಸಿ ಎಲ್ಲಿಗೆ ಹೋಗಿದ್ದಾನೆಂಬ ಯಾವುದಾದರೊಂದು ಮಾರ್ಗದಲ್ಲಿ ಸುಳಿವು ಸಿಕ್ಕಿದರೂ ಸಹ ಆರೋಪಿಯ ಪತ್ತೆಗೆ ಸಹಕಾರಿಯಾಗಲಿದೆ.ಆತ ಎಲ್ಲಿಯೂ ತನ್ನ ಮುಖ ಚಹರೆ ಗುರುತು ಪತ್ತೆಯಾಗದಂತೆ ಟೋಪಿ ಧರಿಸಿ ಕನ್ನಡಕ ಹಾಕಿಕೊಂಡು ಮಾಸ್ಕ್ ಹಾಕಿ ಬಹಳ ಚಾಣಾಕ್ಷತೆ ವಹಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.
|
8 |
+
ಓಡಾಡಿದ ಸ್ಥಳಗಳಲ್ಲಿ ಆತ ಚಾಲಾಕಿತನದಿಂದ ಎಲ್ಲಿಯೂ ತನ್ನ ಮುಖ ಕಾಣದಂತೆ ಮರೆಮಾಚಿದ್ದಾನೆ. ಸಿಸಿ ಕ್ಯಾಮೆರಾ ದೃಶ್ಯಾವಳಿಗಳಲ್ಲೂ ಕೂಡ ಸ್ಪಷ್ಟವಾಗಿ ಆತನ ಮುಖ ಕಾಣುತ್ತಿಲ್ಲ. ಸ್ವಲ್ಪ ಸ್ವಲ್ಪ ಮಾತ್ರ ಕಾಣುತ್ತಿದ್ದು, ಯಾವುದಾದರೂ ಸಿಸಿಕ್ಯಾಮೆರಾದಲ್ಲಿ ಸಂಪೂರ್ಣ ಮುಖ ಕಾಣಿಸುತ್ತದೆಯೇ ಎಂದು ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಕೂಲಂಕುಷವಾಗಿ ತಂಡಗಳು ಪರಿಶೀಲನೆ ನಡೆಸುತ್ತಿವೆ.
|
9 |
+
ಆರೋಪಿಯು ಕೆಫೆಗೆ ಬಂದು ಇಡ್ಲಿ ತಿಂದು ತನ್ನ ಬಳಿ ಇದ್ದ ಕಪ್ಪು ಬಣ್ಣದ ಬ್ಯಾಗ್ನ್ನು ಕೈತೊಳೆಯುವ ಜಾಗ��ಲ್ಲಿಟ್ಟು, ಹೊರಗೆ ನಡೆದುಕೊಂಡು ಹೋಗಿ ಕುಂದಲಹಳ್ಳಿಯಲ್ಲಿ ಬಸ್ ಹತ್ತಿ ಕಾಡುಗೋಡಿಯಲ್ಲಿ ಇಳಿದಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.ಆ ಸ್ಥಳದಿಂದ ಆರೋಪಿ ಎಲ್ಲಿಗೆ ಹೋಗಿದ್ದಾನೆಂಬ ಬಗ್ಗೆ ಸ್ಪಷ್ಟ ಸುಳಿವು ಸಿಕ್ಕಿಲ್ಲ. ಹೀಗಾಗಿ ಕುಂದಲಹಳ್ಳಿ, ಕೆ.ಆರ್.ಪುರ, ಬಯ್ಯಪ್ಪನಹಳ್ಳಿ ಮೆಟ್ರೊ ನಿಲ್ದಾಣ, ಮಾರತ್ತಹಳ್ಳಿ , ಹೆಬ್ಬಾಳ ಹಾಗೂ ಎಚ್ಎಎಲ್ ಸೇರಿದಂತೆ ರಾಮೇಶ್ವರ ಕೆಫೆ ವ್ಯಾಪ್ತಿಯ ನಾಲ್ಕೈದು ಕಿ.ಮೀ ಸುತ್ತಮುತ್ತಲಿನ ಮಾರ್ಗದ ಪ್ರಮುಖ ರಸ್ತೆಗಳು, ಮುಖ್ಯರಸ್ತೆ ಕೂಡುವ ಸಣ್ಣ ರಸ್ತೆಗಳು, ಆಯಾಯ ಪ್ರದೇಶಗಳ ರಸ್ತೆಗಳಲ್ಲಿರುವ ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಎರಡು ರೀತಿಯಲ್ಲಿ ಮ್ಯಾಪಿಂಗ್ ನಡೆಸಿದ್ದಾರೆ.
|
10 |
+
ಒಂದು ರಿವರ್ಸ್ ಮ್ಯಾಪಿಂಗ್ ಮತ್ತೊಂದು ಫಾರ್ವಡ್ ಮ್ಯಾಪಿಂಗ್ ಮಾಡಿ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿಯು ಘಟನೆಗೂ ಮುನ್ನ ಯಾವ ಮಾರ್ಗದಲ್ಲಿ ಹೇಗೆ ಕೆಫೆಗೆ ಬಂದ ನಂತರ ಯಾವ ಮಾರ್ಗದಲ್ಲಿ ಹೇಗೆ ಹೋದ ಎಂಬ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.ಒಟ್ಟಾರೆ ಈ ಪ್ರಕರಣ ನಗರ ಪೊಲೀಸರ ನಿದ್ದೆಗೆಡಿಸಿದ್ದು, ಆರೋಪಿ ಪತ್ತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ.
|
eesanje/url_46_213_6.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ವಿಧಾನಸೌಧದಲ್ಲಿ ಭದ್ರತೆ ಹೆಚ್ಚಳ
|
2 |
+
ಬೆಂಗಳೂರು,ಮಾ.6- ನಗರದ ರಾಮೇಶ್ವರಂ ಕೆಫೆ ಬಾಂಬ್ ಸೋಟ ಪ್ರಕರಣದ ನಂತರ ಆಡಳಿತದ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧದ ಭದ್ರತೆಯನ್ನು ತೀವ್ರಗೊಳಿಸಲಾಗಿದೆ.
|
3 |
+
ವಿಧಾನಸೌಧ, ವಿಕಾಸಸೌಧ ಪ್ರವೇಶಿಸುವ ದ್ವಾರಗಳಲ್ಲಿ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ತೀವ್ರ ತಪಾಸಣೆಗೊಳಪಡಿಸಿ ಪೊಲೀಸರು ಒಳಪ್ರವೇಶಿಸಲುಉ ಅವಕಾಶ ಮಾಡಿಕೊಡುತ್ತಿದ್ದಾರೆ. ಪ್ರವೇಶದ್ವಾರದಲ್ಲೇ ಬ್ಯಾಗ್ಗಳನ್ನು ಪರಿಶೀಲನೆ ಮಾಡಿದ ನಂತರ ಒಳಹೋಗಲು ಅವಕಾಶ ಮಾಡಿಕೊಡಲಾಗುತ್ತಿದೆ.
|
4 |
+
ಎರಡು ಸೌಧಗಳ ನಾಲ್ಕು ದಿಕ್ಕಿನಲ್ಲಿರುವ ಪ್ರವೇಶ ದ್ವಾರಗಳಲ್ಲಿ ಲೋಹ ಶೋಧದ ಮೂಲಕ ಪರಿಶೀಲನೆ ಮಾಡಲಾಗುತ್ತಿದೆ. ಬ್ಯಾಗ್ಗಳನ್ನು ಕಡ್ಡಾಯವಾಗಿ ಸ್ಕ್ಯಾನ್ ಮಾಡಿದ ನಂತರ ಒಳಪ್ರವೇಶಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಪರಿಚಯಸ್ಥರು, ಅಧಿಕಾರಿ, ಸಿಬ್ಬಂದಿ ಎಂಬ ಯಾವ ಸಡಿಲಿಕೆಯೂ ಇಲ್ಲದೆ ಕಟ್ಟುನಿಟ್ಟಿನ ತಪಾಸಣೆಯನ್ನು ಮಾಡಲಾಗುತ್ತಿದೆ.
|
eesanje/url_46_213_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಆಯ್ಕೆ?
|
2 |
+
ಬೆಂಗಳೂರು,ಮಾ.6- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ.ಈ ಕ್ಷೇತ್ರದಿಂದ ಮಂಜುನಾಥ್ ಅವರ ಲ್ಲದೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸ್ಪರ್ಧೆಗಿಳಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದ್ದು, ಇನ್ನು ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
3 |
+
ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಎನ್ಡಿಎ ಮೈತ್ರಿಕೂಟದ ರಾಜ್ಯ ನಾಯಕರು ನಿನ್ನೆ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಭೆ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಮಹತ್ವದ ಚರ್ಚೆ ನಡೆಸಿದ್ದಾರೆ.ಸಭೆಯಲ್ಲಿ ಈ ಕ್ಷೇತ್ರದ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ರ್ಪಸಬೇಕೆಂಬ ಒತ್ತಡವನ್ನು ಹಾಕಲಾಗಿದೆ. ಅಲ್ಲದೆ ಡಾ.ಸಿ.ಎನ್.ಮಂಜುನಾಥ್ ಹಾಗೂ ಸಿ.ಪಿ.ಯೋಗೇಶ್ವರ್ ಅವರನ್ನು ಸ್ಪರ್ಧೆಗಿಳಿಸುವ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಾಗಿದೆ.
|
4 |
+
ಈ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಸ್ಪರ್ಧೆ ಮಾಡಲಿದ್ದಾರೆ ಎಂಬ ವಿಚಾರ ಈಗಾಗಲೇ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮೂವರಲ್ಲಿ ಯಾರನ್ನು ಕಣಕ್ಕಿಳಿಸಿದರೆ ಗೆಲುವು ಸುಲಭವಾಗಲಿದೆ ಎಂಬ ವಿಚಾರದ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
|
5 |
+
ಸಭೆಯಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ವಿವಿಧ ವಿಧಾಸಭಾ ಕ್ಷೇತ್ರಗಳ ಮುಖಂಡರು ಭಾಗವಹಿಸಿದ್ದರು. ಪ್ರಮುಖವಾಗಿ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ಡಿ.ನಾಗರಾಜಯ್ಯ, ರಾಜ್ಯಸಭೆಯ ಮಾಜಿ ಸದಸ್ಯ ಡಿ.ಕುಪೇಂದ್ರ ರೆಡ್ಡಿ, ಶಾಸಕ ಎಂ.ಕೃಷ್ಣಪ್ಪ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ಮಂಜುನಾಥ್, ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ಜಯಮುತ್ತು, ನಿರ್ದೇಶಕ ಡಾ.ನಾರಾಯಣ ಸ್ವಾಮಿ, ಕೃಷ್ಣಕುಮಾರ್, ಕುಣಿಗಲ್ ಜಗದೀಶ್, ಕೊಟ್ಟಿಗೆರೆ ಮಂಜುನಾಥ್, ಸಿದ್ದಮರಿಗೌಡ ಕನಕಪುರ ಸೇರಿದಂತೆ ಬಿಜೆಪಿ, ಜೆಡಿಎಸ್ನ ಹಲವು ಮುಖಂಡರು ಭಾಗವಹಿಸಿ ಚರ್ಚೆ ನಡೆಸಿದ್ದಾರೆ.
|
6 |
+
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆಗಿಳಿಸಲಿರುವ ಅಭ್ಯರ್ಥಿಯನ್ನು ಶೀಘ್ರ ಆಯ್ಕೆ ಮಾಡಿ ಅಕೃತವಾಗಿ ಪ್ರಕಟಿಸುವಂತೆ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ.ಚುನಾವಣಾ ವೇಳಾಪಟ್ಟಿ ಪ್ರಕಟವಾಗುವವರೆಗೂ ಕಾಯದೇ ಅಕೃತ ಅಭ್ಯರ್ಥಿಯನ್ನು ಪ್ರಕಟಿಸಬೇಕು. ಅವರ ಗೆಲುವಿಗೆ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಿದ್ದಾರ��.
|
7 |
+
ಶೀಘ್ರ ಅಭ್ಯರ್ಥಿ ಘೋಷಣೆ ಮಾಡುವ ಮುಖಂಡರ ಆಗ್ರಹಕ್ಕೆ ಎಚ್.ಡಿ.ಕುಮಾರಸ್ವಾಮಿ ಕೂಡ ಸಮ್ಮತಿ ಸೂಚಿಸಿದ್ದಾರೆ. ಎನ್ಡಿಎ ಅಭ್ಯರ್ಥಿಯಾಗಿ ಯಾರೇ ಸ್ಪರ್ಧೆಗಿಳಿದರೂ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
|
eesanje/url_46_213_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ
|
2 |
+
ಬೆಂಗಳೂರು,ಮಾ.6- ಬೆಂಗಳೂರು ರಾಮೇಶ್ವರಂ ಕೆಫೆ ಸೋಟ ಪ್ರಕರಣದಲ್ಲಿ ಪೊಲೀಸರ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಹೀಗೇ ಮುಂದುವರೆದರೆ ಶೀಘ್ರವೇ ಪ್ರಕರಣ ಭೇದಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬಹುತೇಕ ಆರೋಪಿಯನ್ನು ಪತ್ತೆ ಹಚ್ಚುವ ಸನಿಹದಲ್ಲಿದ್ದೇವೆ ಎಂದು ಹೇಳಿದರು.
|
3 |
+
ಅಧಿಕಾರಿಗಳು ತಮಗೆ ನೀಡಿರುವ ಮಾಹಿತಿ ಪ್ರಕಾರ ಮಹತ್ವದ ಮಾಹಿತಿಗಳು ಸಿಕ್ಕಿವೆ. ಹೊಸ ಹೊಸ ವಿಚಾರಗಳು ದೊರೆತಿವೆ. ಈವರೆಗೂ ಯಾರನ್ನೂ ಬಂಧಿಸಿಲ್ಲ. ಅನುಮಾನ ಬಂದವರನ್ನು ಕರೆತಂದು ಹೇಳಿಕೆ ಪಡೆಯುವುದು, ಮಾಹಿತಿ ಪಡೆಯುವುದನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
|
4 |
+
ರಾಷ್ಟ್ರೀಯ ತನಿಖಾ ದಳ ಈವರೆಗೂ ಅಕೃತವಾಗಿ ಪ್ರಕರಣದ ತನಿಖೆಯ ಉಸ್ತುವಾರಿ ವಹಿಸಿಕೊಂಡಿಲ್ಲ. ನಿನ್ನೆ ಬೆಂಗಳೂರಿಗೆ ಬಂದು ತನಿಖೆಯ ಹೊಣೆಗಾರಿಕೆ ತೆಗೆದುಕೊಳ್ಳಬೇಕಿತ್ತು. ಆದರೆ ಎನ್ಐಎ ಅಧಿಕಾರಿಗಳು ಬಂದಿಲ್ಲ. ಅವರು ಬಂದು ಅಕೃತವಾಗಿ ಮಾಹಿತಿ ಪಡೆದು ತನಿಖೆಯ ಜವಾಬ್ದಾರಿ ಹೊತ್ತುಕೊಳ್ಳಬೇಕಿದೆ. ಇದುವರೆಗೂ ಆ ರೀತಿ ಆಗಿಲ್ಲ. ಬಹುಶಃ ಇಂದು ಬರಬಹುದು. ಅವರು ಎಷ್ಟು ಜನರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ತಮಗೆ ಇಲ್ಲ ಎಂದರು.
|
5 |
+
ಪಾಕಿಸ್ತಾನ ಪರವಾಗಿ ವಿಧಾನಸಭೆಯಲ್ಲಿ ಘೋಷಣೆ ಕೂಗಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗಿದೆ. ತನಿಖೆ ಅಗತ್ಯವಿದ್ದು, ಈ ಹಂತದಲ್ಲಿ ಹೆಚ್ಚಿನ ಚರ್ಚೆ ನಡೆಸುವುದು ಸೂಕ್ತವಲ್ಲ. ರಾಜ್ಯಸಭಾ ಸಮಿತಿ ಸದಸ್ಯ ನಾಸಿರ್ ಹುಸೇನ್ ಜೊತೆ ರೌಡಿಯೊಬ್ಬ ಕಾಣಿಸಿಕೊಂಡಿರುವ ಫೋಟೋಗಳು ವೈರಲ್ ಆಗಿರುವ ಬಗ್ಗೆ ಚರ್ಚೆ ಅಪ್ರಸ್ತುತ. ಪಾಕಿಸ್ತಾನದ ಪರ ಘೋಷಣೆಗೆ ಸಂಬಂಧಪಟ್ಟಂತೆ ಸರ್ಕಾರ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಂಡಿದೆ. ಬಿಜೆಪಿಯವರು ಯಾವುದೇ ಟೀಕೆ ಮಾಡಲಿ, ದೂರು ಕೊಡಲಿ, ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
|
6 |
+
ಗೆಲುವೇ ಮಾನದಂಡ :ಲೋಕಸಭಾ ಚುನಾವಣೆಯಲ್ಲಿ ಗೆಲುವೇ ಮಾನದಂಡವಾಗಿದೆ. ಹೀಗಾಗಿ ಗೆಲ್ಲುವವರಿಗೆ ಟಿಕೆಟ್ ನೀಡಲಾಗುವುದು. ಪಕ್ಷದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ನಮ್ಮಿಂದಲೂ ಮಾಹಿತಿ ಕಲೆ ಹಾಕಿದೆ. ಕಾರ್ಯಕರ್ತರ ಅಭಿಪ್ರಾಯಗಳನ್ನೂ ಸಂಗ್ರಹಿಸಲಾಗಿದೆ ಎಂದರು.
|
7 |
+
ಕುಟುಂಬ ರಾಜಕಾರಣ, ಬೇರೆ ಬೇರೆ ವಿಚಾರಗಳ ಚರ್ಚೆ ಸದ್ಯಕ್ಕೆ ಅಪ್ರಸ್ತುತ. ಸದ್ಯಕ್ಕೆ ನಾವು ಗೆಲ್ಲಬೇಕು, ಅಷ್ಟೇ ಮುಖ್ಯ. ಉಳಿದ ಎಲ್ಲಾ ವಿಚಾರಗಳು ಅನಂತರ ಚರ್ಚೆಯಾಗುತ್ತವೆ. ನಾಳೆ ಕೇಂದ್ರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅದರಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
|
8 |
+
ಈವರೆಗೂ 2 ಸ್ಕ್ರೀನಿಂಗ್ ಕಮಿಟಿ ಸಭೆಗಳು ನಡೆದಿವೆ. ಅದರಲ್ಲಿ ಬಹುತೇಕ ಒಂದೊಂದು ಕ್ಷೇತ್ರಕ್ಕೆ ಒಂದೊಂದೇ ಹೆಸರನ್ನು ನಿರ್ಣಯಿಸಲಾಗಿದೆ. ನಾಳೆ ನಡೆಯುವ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಬಹುತೇಕ ವಾರ, ಹತ್ತು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆಯಿದೆ. ಅದನ್ನು ಪಕ್ಷದ ಅಧ್ಯಕ್ಷರು ಖಚಿತಪಡಿಸುತ್ತಾರೆ ಎಂದರು.
|
9 |
+
ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಒಮ್ಮೆಲೇ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಯಲ್ಲಿ ಆಯಾ ಉಸ್ತುವಾರಿ ಸಚಿವರು, ಶಾಸಕರು, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಸೂಚನೆ ನೀಡಿದ್ದಾರೆ. ಪಕ್ಷದ ರಾಜ್ಯದ ನಾಯಕರು ಕೂಡ ಇದೇ ರೀತಿಯ ತಾಕೀತು ಮಾಡಿದ್ದಾರೆ ಎಂದು ಹೇಳಿದರು.
|
eesanje/url_46_213_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
“ಮುಂದಿನ ಸಿಎಂ ಶಿವಣ್ಣ” : ಕಾರ್ಯಕರ್ತರ ಘೋಷಣೆ
|
2 |
+
ಹುಬ್ಬಳ್ಳಿ,ಮಾ.6- ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಕೇಳಿಬಂದಿದೆ.ಡಿ.ಕೆ.ಶಿವಕುಮಾರ್ ಇಂದು ಬೆಳಿಗ್ಗೆ ಹುಬ್ಬಳ್ಳಿಗೆ ಆಗಮಿಸಿದರು. ಸುದ್ದಿಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಮಾತನಾಡಲು ಆಗಮಿಸು ತ್ತಿದ್ದಂತೆ ಕೆಲವರು ಮುಂದಿನ
|
3 |
+
ಮುಖ್ಯಮಂತ್ರಿ ಶಿವಣ್ಣ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್ ಮೌನವಾಗಿದ್ದು, ಘೋಷಣೆಗಳನ್ನುಆಲಿಸಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಪುತ್ರ ಯತೀಂದ್ರ ಮುಂದಿನ 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿಕೆ ನೀಡಿದ್ದರು. ಆ ಕುರಿತಂತೆ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದರು.
|
4 |
+
ಇತ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ದಲಿತರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ ಎಂದು ಅಸಮಾಧಾನ ಹೊರಹಾಕಿದ್ದ ಬೆಳವಣಿಗೆ ನಡೆದಿದೆ.
|
eesanje/url_46_214_1.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮೋದಿ ದೇಶದ ಸಮರ್ಥ ನಾಯಕ : ಎಚ್ಡಿಡಿ
|
2 |
+
ಬೆಂಗಳೂರು,ಮಾ.5- ಪ್ರಧಾನಿ ನರೇಂದ್ರಮೋದಿ ಅವರು ದೇಶದ ಸಮರ್ಥ ನಾಯಕರಾಗಿದ್ದು, ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುತ್ತಾರೆ ಎಂಬ ನಂಬಿಕೆ ವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು, ಒಡೆದು ಹೋಗಿದ್ದ ಕಾವೇರಿ ನ್ಯಾಯಾೀಧಿಕರಣ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.
|
3 |
+
ಬೆಂಗಳೂರಿನಲ್ಲಿ ಕುಡಿಯುವ ನೀರಿಲ್ಲದೆ ಜನರು ಕಣ್ಣೀರು ಹಾಕುತ್ತಿದ್ದಾರೆ. ಹೇಮಾವತಿ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಕೊಡುವುದಿಲ್ಲ ಎಂದು ಹೇಳಿದ್ದೀರಿ. ಹೇಮಾವತಿ ಜಲಾಶಯದ ನೀರನ್ನು ಬಳಸಿ ಬೆಂಗಳೂರು, ತುಮಕೂರು, ಹಾಸನ, ಮಂಡ್ಯ ಜಿಲ್ಲೆಗಳಿಗೆ ನೀರು ಕೊಟ್ಟು ಜನರನ್ನು ಉಳಿಸಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
|
4 |
+
ತಮಿಳುನಾಡಿಗೆ ಮಾಸಿಕ ಎರಡೂವರೆ ಟಿಎಂಸಿ ಅಡಿಯಂತೆ ಮೇ ಅಂತ್ಯದವರೆಗೆ 10 ಟಿಎಂಸಿ ನೀರು ಬಿಡಬೇಕಾಗಿದೆ. ಆದರೆ ಬೆಂಗಳೂರಿನ ಜನತೆ ನೀರಿಲ್ಲದೆ ಕಣ್ಣೀರು ಹಾಕುತ್ತಿದ್ದಾರೆ. ನಾನು ಸಂಸತ್ನಲ್ಲಿ ಕುಡಿಯುವ ನೀರಿನ ವಿಚಾರ ಪ್ರಸ್ತಾಪಿಸಿದಾಗ ಮನಮೋಹನ್ ಸಿಂಗ್ ಸರ್ಕಾರದಲ್ಲಿದ್ದ ರಾಜ್ಯ ಪ್ರತಿನಿಧಿಸುವ ನಾಲ್ವರು ಸಚಿವರು ಸಹಾಯಕ್ಕೆ ಬರಲಿಲ್ಲ ಎಂದರು.
|
5 |
+
ಜಲಸಂಪನ್ಮೂಲ ಖಾತೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಂದಿದ್ದಾರೆ. ಆದರೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಟ್ಯಾಂಕರ್ಗೆ ಎರಡೂವರೆ ಸಾವಿರ ರೂ. ನೀಡಬೇಕಾದ ಪರಿಸ್ಥಿತಿ ಎದುರಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೂ ಮೋದಿ ವಿರುದ್ದ ಆರೋಪ ಮಾಡುತ್ತಾ, ಟೀಕೆ ಮಾಡುತ್ತಾ ಕಾಲ ಕಳೆಯುತ್ತೀರಿ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹಣಕಾಸು ಆಯೋಗದ ತೀರ್ಮಾನ ಮಾಡಿದ್ದು ಬಿಟ್ಟರೆ ಏನು ಕೊಟ್ಟಿದ್ದಾರೆ ಹೇಳಿ. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿ ಏನು ಕೊಟ್ಟಿದ್ದಾರೆ ಹೇಳಿ, ಪ್ರಧಾನಿ ಮೋದಿಯವರು ರಾಷ್ಟ್ರದ ಸಮರ್ಥ ನಾಯಕ. ಇಡೀ ವಿಶ್ವ ಒಪ್ಪಿಕೊಂಡಿದೆ. ಅವರ ಬಗ್ಗೆ ಮಾತನಾಡಲು ಇವರು ಯಾರು? ಇತಿಮಿತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗಾಳಿ ನಡೆಸಿದರು.
|
6 |
+
ಜೆಡಿಎಸ್ ಬಗ್ಗೆ ಮುಖ್ಯಮಂತ್ರಿ ನೀಡಿದ್ದ ಹೇಳಿಕೆಗಳು ಪತ್ರಿಕೆಗಳಲ್ಲಿ ವರದಿಯಾಗಿರುವುದನ್ನು ಉಲ್ಲೇಖಿಸಿ ಮಾತನಾಡಿದ ಗೌಡರು, ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎಷ್ಟು ದಿನದಿಂದ ಇದೆ, ಎಷ್ಟು ಬಗೆಹರಿಸಿದ್ದೀರಿ, 10 ತಿಂಗಳಲ್ಲಿ ಎಷ್ಟು ಪ್ರವಾಸ ಮಾಡಿದ್ದೀರಿ, ವಿಧಾನಮಂಡಲದ ಅಧಿವೇಶನ ಹೊರತುಪಡಿಸಿದರೆ ಈ ಮಂತ್ರಿ, ಆ ಮಂತ್ರಿ ಮನೆಯಲ್ಲಿ ಊಟ, ಪಕ್ಷದ ಜಂಟಿ ಸಭೆ ಹೊರತು ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದರು.
|
7 |
+
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಫಲಾನುಭವಿಗಳಿಗೆ ತಲುಪಿದೆಯೋ ಇಲ್ಲವೋ ಎಂಬುದರ ಪರಿಶೀಲನೆ, ವಿಶ್ಲೇಷಣೆ ಮಾಡಲು ಐವರು ಮಾಜಿ ಸಚಿವರನ್ನು ನೇಮಿಸಿದ್ದೀರಿ, ಜಿಲ್ಲಾ ಮಟ್ಟದಲ್ಲೂ ನೇಮಿಸುವುದಾಗಿ ಹೇಳಿದ್ದೀರಿ, ಇದು ಎಂಥ ಆಡಳಿತ? ತೀವ್ರ ಬರದ ನಡುವೆಯೂ ನಿಗಮ ಮಂಡಳಿಗಳ 95 ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದೀರಿ ಎಂದು ಸರ್ಕಾರದ ಆಡಳಿತದ ವೈಖರಿಯನ್ನು ತರಾಟೆಗೆ ತೆಗೆದುಕೊಂಡರು.
|
8 |
+
ನೆಲಮಂಗಲಕ್ಕೆ ಹೇಮಾವತಿ ನೀರು ಕೊಡುವುದಾಗಿ ಮೂರು ತಿಂಗಳ ಹಿಂದೆ ಹೇಳಿದ್ದರು. ಈಗ ವೃಷಭಾವತಿ ನೀರನ್ನು ಕೊಡುವುದಾಗಿ ಹೇಳುತ್ತಿದ್ದಾರೆ. ಜನರು ನಿಮ್ಮನ್ನ ನಂಬಬೇಕಾ? ಎಂದು ವಾಗ್ದಾಳಿ ನಡೆಸಿದರು. ಎತ್ತಿನಹೊಳೆ ಯೋಜನೆಗೆ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗ ಚಾಲನೆ ನೀಡಲಾಗಿತ್ತು. ಆಗ 8323 ಕೋಟಿ ರೂ. ಇದ್ದದ್ದು ಈಗ 23,252 ಕೋಟಿ ರೂ.ಗೆ ಏರಿಕೆಯಾಗಿದೆ. ಈ ಯೋಜನೆಯಲ್ಲಿ ನಿಮ್ಮ ಪಾತ್ರವೇನು? ಕೋಲಾರ ಚಿಕ್ಕಬಳ್ಳಾಪುರಕ್ಕೆ ನೀರು ತರುವ ಯೋಜನೆಯಲ್ಲವೇ? ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹೇಮಾವತಿಯಿಂದ ಅರಸೀಕೆರೆಗೆ ನೀರು ಕೊಡಲಾಯಿತು.
|
9 |
+
ಐದು ಗ್ಯಾರಂಟಿಗಳಿಂದ ಜನರು ಸಂತೋಷವಾಗಿದ್ದಾರೆ ಎಂದು ಹೇಳಿದ್ದೀರಿ, ಹಾಗಾದರೆ 15 ದಿನಕ್ಕೊಮ್ಮೆ ನೀರು, ಒಂದು ಟ್ಯಾಂಕರ್ ನೀರಿಗೆ 2500 ರೂ. ಕೊಡಬೇಕೆಂದು ಕಣ್ಣೀರು ಹಾಕುತ್ತಿರುವುದು ಏಕೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಐದೂ ಪೈಸೆ ತೆಗೆದುಕೊಂಡಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಹೇಳುವ ಸಿದ್ದರಾಮಯ್ಯನವರು ಆ ಸ್ಥಾನಕ್ಕೆ ಗೌರವ ತಂದಿದ್ದಾರೆಯೇ? ತಮ್ಮ ಸಂಬಂಧಿ ಅಥವಾ ಅವರ ಸಮಾಜಕ್ಕೆ ಸೇರಿದ ಕಿರಿಯ ಅಧಿಕಾರಿಯನ್ನು ನೀರಾವರಿ ಇಲಾಖೆಗೆ ನೇಮಕ ಮಾಡಿದ್ದಾರೆ. ಇದೊಂದು ನಿದರ್ಶವಷ್ಟೇ, ಎಸಿಬಿ ರಚನೆ ಮಾಡಿದರು ಏನಾಯ್ತು ಎಂದು ಟೀಕಾ ಪ್ರಹಾರ ನಡೆಸಿದರು.
|
10 |
+
ಮಾಜಿ ಶಾಸಕ ಡಾ.ಅನ್ನದಾನಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಮೇಶ್ ಗೌಡ ಉಪಸ್ಥಿತರಿದ್ದರು.
|
eesanje/url_46_214_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪಾಕ್ಪರ ಘೋಷಣೆ ಕೂಗಿಲ್ಲ ಎಂದವರು ಕ್ಷಮೆಯಾಚಿಸಬೇಕು : ಬೊಮ್ಮಾಯಿ
|
2 |
+
ಬೆಳಗಾವಿ,ಮಾ.5- ಮಾಧ್ಯಮಗಳಲ್ಲಿ ಪಾಕಿಸ್ತಾನ ಪರ ಘೋಷಣೆ ಸ್ಪಷ್ಟವಾಗಿತ್ತು. ಆದರೂ ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತುದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ. ದೇಶದ್ರೋಹಿಗಳಿಗಿಂತ ಇವರ ನಡೆಯೇ ಆತಂಕಕ್ಕೆ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ ಸಂಬಂಧ ಎಫ್ಎಸ್ಎಲ್ ವರದಿ ಬಂದು ನಾಲ್ಕು ದಿನ ಕಳೆದಿದೆ. ಎರಡು ದಿನಗಳ ಹಿಂದೆ ಎನ್ಐಎ ಎಫ್ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ. ಆದರೆ ಸರ್ಕಾರ ಮಾತ್ರ ಈಗಲೂ ಹೊಣೆಗೇಡಿತನದ ಹೇಳಿಕೆ ನೀಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತೇವೆ ಎಂದು ಕಾಂಗ್ರೆಸ್ ದೂರಿದೆ. ಪತ್ರಕರ್ತರನ್ನು ಗುರಿ ಮಾಡಿಕೊಂಡು ಹೇಳಿಕೆ ನೀಡುತ್ತಿದ್ದಾರೆ. ಈಗ ಎಫ್ಎಸ್ಎಲ್ ವರದಿ ಪಾಕ್ ಪರ ಘೋಷಣೆ ಕೂಗಿರುವುದು ನಿಜ ಎಂದು ಸ್ಪಷ್ಟಪಡಿಸಿದೆ. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಈಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
|
4 |
+
ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಶಂಕುಸ್ಥಾಪನೆ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ ಬೊಮ್ಮಾಯಿ, ಸರ್ಕಾರ ಬಂದು 9 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆ ರೂಪಿಸಿಲ್ಲ. ನೀರಾವರಿ ಯೋಜನೆಗಳ ನಿರ್ಲಕ್ಷ್ಯ ಮಾಡಿದೆ. ಹಳೆಯ ಯೋಜನೆ ಮತ್ತೆ ಚಾಲನೆ ನೀಡುತ್ತಿದ್ದಾರೆ. ಅಧಿಕಾರಿಗಳು ಮಿಸ್ ಗೈಡ್ ಮಾಡುತ್ತಿದ್ದು, ಮುಖ್ಯಮಂತ್ರಿಗಳು ಇದರ ಪರಿಶೀಲನೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
|
5 |
+
ಬೆಳಗಾವಿಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮನ ಹಿನ್ನೆಲೆ ಬೆಳಗಾವಿಯಲ್ಲೇ ಬಿಜೆಪಿ- ಜೆಡಿಎಸ್ ಮೈತ್ರಿಯ ಸೀಟು ಹಂಚಿಕೆ ಬಗ್ಗೆ ಚರ್ಚೆ ಆಗುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಬೆಳಗಾವಿಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ದೆಹಲಿಯಲ್ಲಿ ಆಗಲಿದೆ ಎಂದರು. ಇದೇ ವೇಳೆ ಹಾವೇರಿಯಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ನಾನು ಈಗಾಗಲೇ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದು ಅವರು ತಿಳಿಸಿದರು.
|
eesanje/url_46_214_11.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ : ಕಾಂಗ್ರೆಸ್ ನಡೆಗೆ ವ್ಯಾಪಕ ಟೀಕೆ
|
2 |
+
ಬೆಂಗಳೂರು,ಮಾ.5- ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ಆರೋಪಿಗಳ ಪರ ವಕಾಲತ್ತು ವಹಿಸುವ ಮೂಲಕ ಕಾಂಗ್ರೆಸ್ ಮತಬ್ಯಾಂಕ್ಗಾಗಿ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದೆ ಎಂಬ ಟೀಕೆಗಳು ವ್ಯಾಪಕವಾಗಿ ಕೇಳಿಬರಲಾರಂಭಿಸಿದೆ. ಫೆಬ್ರವರಿ 27 ರಂದು ರಾಜ್ಯಸಭಾ ಚುನಾವಣೆ ಗೆಲುವಿನ ಸಂಭ್ರಮಾಚರಣೆಯ ನಡುವೆ ಕಾಂಗ್ರೆಸ್ನ ವಿಜೇತ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಅವರ ಗುಂಪಿನಲ್ಲಿದ್ದವರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದರು. ಕೆಲ ಘಂಟೆಗಳಲ್ಲೇ ಇದು ಸುದ್ದಿಯಾಗಿ ಪ್ರಸಾರಗೊಂಡು ವ್ಯಾಪಕ ಚರ್ಚೆಗೆ ಗ್ರಾಸವಾಯಿತು.
|
3 |
+
ಅದರ ಬೆನ್ನ ಹಿಂದೆಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿಲ್ಲ. ನಾಸಿರ್ ಸಾಬ್ ಜಿಂದಾಬಾದ್ ಎಂಬ ಘೋಷಣೆ ಕೂಗಲಾಗಿದೆ ಎಂದು ಆಡಿಯೋವೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ಗ್ರೂಪ್ನಲ್ಲಿ ಹರಿಯಬಿಡಲಾಗಿತ್ತು. ಅಲ್ಲಿಂದ ಕೆಲ ಸಚಿವರು ಮೇಲಿಂದ ಮೇಲೆ ಆರೋಪಿಗಳ ಪರ ವಕಾಲತ್ತು ವಹಿಸಲಾರಂಭಿಸಿದರು.
|
4 |
+
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರು ಅದೇ ದಿನ ರಾತ್ರಿಯೇ ಟ್ವೀಟ್ ಮಾಡಿ ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ತೀರ್ಪು ನೀಡಿದ್ದರು. ವಿಚಿತ್ರ ಎಂದರೆ ಈ ವಿಚಾರವಾಗಿ ಸಂಪುಟದ ಸಚಿವರಲ್ಲಿ ಒಮ್ಮತದ ಕೊರತೆ ಕಂಡುಬಂದಿತ್ತು. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಗಳು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಒದ್ದು ಒಳಗೆ ಹಾಕುತ್ತೇವೆ ಎಂದಿದ್ದವರು ಮಾರನೇ ದಿನ ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದರು.
|
5 |
+
ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಎಫ್ಎಸ್ಎಲ್ ವರದಿ ಬಂದ ಬಳಿಕ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಲ್ಲದೆ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ. ಅವರು ತನಿಖೆ ನಡೆಸಲು ಸಮರ್ಥರಿದ್ದಾರೆ. ಯಾವ ಸಂದರ್ಭದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ ಎಂದು ಹೇಳಿದ್ದರು.
|
6 |
+
ಗೃಹಸಚಿವರು ವಿಶ್ವಾಸ ವ್ಯಕ್ತಪಡಿಸಿದ ತನಿಖಾಕಾರಿಗಳ ಸಾಮಥ್ರ್ಯ ಒಂದು ವಾರವಾದರೂ ಗೊಂದಲದಲ್ಲೇ ಇದ್ದದ್ದು ಪ್ರಶ್ನಾರ್ಹವಾಗಿದೆ. ಎಫ್ಎಸ್ಎಲ್ ಕ್ಷೇತ್ರದಲ್ಲಿ ಕೆಲಸ ಮಾಡುವ ಖಾಸಗಿ ಸಂಸ್ಥೆ ವಿವಾದಿತ ಆಡಿಯೋ, ವಿಡಿಯೋಗಳ ಬಗ್ಗೆ ಎರಡು ದಿನದಲ್ಲೇ ವರದಿ ನೀಡಿತ್ತು. ಅದು ಸಾಮಾಜಿಕ ಜಾಲತಾಣದಲ್ಲಿ ಮೂರು ದಿನಗಳ ಹಿಂದೆಯೇ ಅಲೆದಾಡಿತ್ತು. ಆದರೂ ಸರ್ಕಾರ ಎಫ್ಎಸ್ಎಲ್ ವರದಿ ಬಂದಿಲ್ಲ ಎಂಬ ಸಬೂಬುಗಳ ಮೂಲಕವೇ ಒಂದು ವಾರ ಕಾಲಾಹರಣ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ.
|
7 |
+
ಖಾಸಗಿ ಸಂಸ್ಥೆಯ ಎಫ್ಎಸ್ಎಲ್ ವರದಿಯನ್ನು ಬಿಜೆಪಿ ನಾಯಕರು ಬಹಿರಂಗಪಡಿಸಿ ಟ್ವೀಟ್ ಮೇಲೆ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದಾಗ ಅನಿವಾರ್ಯವಾಗಿ ಒತ್ತಡಕ್ಕೆ ಸಿಲುಕಿದ ಸರ್ಕಾರ ನಿನ್ನೆ ರಾತ್ರಿ ಆರೋಪಿಗಳನ್ನು ಬಂಧಿಸಿದೆ. ದುರಂತ ಎಂದರೆ ನಿನ್ನೆ ಮಧ್ಯಾಹ್ನ ಕೂಡ ಸಚಿವರಾದ ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ ಘಟನೆಯ ಬಗ್ಗೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದರು.
|
8 |
+
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರು ಗೊಂದಲಕಾರಿ ಹೇಳಿಕೆಗಳನ್ನು ನೀಡಿದ್ದರು. ಅಂತಿಮವಾಗಿ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬೆಂಗಳೂರು ಪೊಲೀಸರು ಎಫ್ಎಸ್ಎಲ್ ವರದಿ ಮತ್ತು ಸಾಂದರ್ಭಿಕ ಸಾಕ್ಷಿಗಳನ್ನು ಆಧರಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಂದರ್ಭಿಕ ಸಾಕ್ಷಿಗಳು ಆರಂಭದಿಂದಲೂ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ದೃಢತೆಯಲ್ಲೇ ಇದ್ದವು. ಎಫ್ಎಸ್ಎಲ್ ವರದಿ ತಾಂತ್ರಿಕ ಅಂಶಗಳಿಂದ ಕೂಡಿದ್ದರಿಂದಾಗಿ ಸರ್ಕಾರದ ವಾದವನ್ನು ಜನ ಕೂಡ ನಂಬಿದ್ದರು. ಆದರೆ ಖಾಸಗಿ ವರದಿ ಬಹಿರಂಗವಾದ ಬಳಿಕ ಬೇರೆ ದಾರಿ ಕಾಣದೆ ಕ್ರಮ ಕೈಗೊಂಡಿದ್ದು ಸರ್ಕಾರದ ಸಾಮಥ್ರ್ಯವನ್ನು ಪ್ರಶ್ನಿಸುವಂತೆ ಮಾಡಿದೆ.
|
9 |
+
ಬೆಂಗಳೂರು ಸ್ಪೋಟ ಪ್ರಕರಣದಲ್ಲೂ ಮೂರು ದಿನಗಳ ಬಳಿಕ ಎನ್ಐಎ ತನಿಖೆಗೆ ವಹಿಸಲಾಗಿದೆ. ಅತೀ ಹೆಚ್ಚು ಅತ್ಯಾಧುನಿಕತೆ ಹಾಗೂ ಸಾಮಥ್ರ್ಯ ಹೊಂದಿರುವ ರಾಜ್ಯದ ಪೊಲೀಸರು ಘಟನೆಯಾಗಿ 36 ಗಂಟೆ ಕಳೆದರೂ ಸಿಸಿಟಿವಿಯ ಪರಿಶೀಲನೆಯಲ್ಲೇ ಕಾಲಾಹರಣ ಮಾಡಿದ್ದು ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
|
10 |
+
ಬಿಜೆಪಿ ಆರಂಭದಿಂದಲೂ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ, ಮತ ಬ್ಯಾಂಕ್ಗಾಗಿ ಓಲೈಕೆಯಲ್ಲೇ ಮುಳುಗಿದೆ ಎಂಬ ಟೀಕೆ ಮಾಡುತ್ತಲೇ ಬಂದಿದೆ. ಪಾಕಿಸ್ತಾನ್ ಪರ ಜಿಂದಾಬಾದ್ ಪ್ರಕರಣ ಸೇರಿದಂತೆ ಬೆಂಗಳೂರಿನ ಸ್ಪೋಟ ಪ್ರಕರಣಗಳಲ್ಲಿ ಬಿಜೆಪಿ ಟೀಕೆ ಕಾಂಗ್ರೆಸ್ ಅನ್ನು ತಲೆ ತಗ್ಗಿಸುವಂತೆ ಮಾಡಿದೆ. ರಾಜಕಾರಣಕ್ಕಾಗಿ ಆಂತರಿಕ ಭದ್ರತಾ ವಿಷಯದಲ್ಲೂ ರಾಜಿ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ನ ನಡವಳಿಕೆಗಳು ಸಾಕಷ್ಟು ಟೀಕೆಗೆ ಗುರಿಯಾಗಿವೆ.
|
eesanje/url_46_214_12.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಲಂಚ ಕೇಳಿದ್ದೇನೆ ಎಂದು ಹೇಳಿದರೆ ಅದೇ ದಿನ ರಾಜಕೀಯ ನಿವೃತ್ತಿ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು, ಮಾ.4- ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆಗೆ ಐದು ಪೈಸೆ ಲಂಚ ಕೇಳಿದ್ದೇನೆ ಎಂದು ಯಾವುದಾದರೂ ಗುತ್ತಿಗೆದಾರರು ಹೇಳಿದರೆ ಅದೇ ದಿನ ನಾನು ರಾಜೀನಾಮೆ ನೀಡುತ್ತೇನೆ ಮತ್ತು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.
|
3 |
+
ಇಂದಿನಿಂದ ಆರಂಭವಾದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಮಾವೇಶ 2024ರಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಜೆಟ್ಗಳನ್ನು ಮಂಡನೆ ಮಾಡಿದ್ದು, ಹಣಕಾಸು ಸಚಿವನಾಗಿ ಎಲ್ಒಸಿ ಬಿಡುಗಡೆಗೆ ಗುತ್ತಿಗೆದಾರರಿಂದ ಐದು ಪೈಸೆ ಲಂಚ ಕೇಳಿದ್ದೇನೆ ಎಂದರೆ ಯಾರಾದರೂ ಹೇಳಿದರೆ ಅವತ್ತೆ ರಾಜೀನಾಮೆ ಕೊಡುತ್ತೇನೆ ಮತ್ತು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಏರಿದ ಧ್ವನಿಯಲ್ಲಿ ಹೇಳಿದರು.ಗುತ್ತಿಗೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿರುವುದು ನಿಜ, ಅದನ್ನು ಹಂತ ಹಂತವಾಗಿ ಕಡಿಮೆ ಮಾಡಬೇಕಾಗುತ್ತದೆ. ರಾಜ್ಯದ ಅಭಿವೃದ್ಧಿಯಲ್ಲಿ ಗುತ್ತಿಗೆದದಾರರ ಪಾತ್ರ ಪ್ರಮುಖವಾಗಿದೆ, ಸರ್ಕಾರದ ಜೊತೆ ಕೈ ಜೊಡಿಸಬೇಕು. ಪಾರದರ್ಶಕತೆ ಪಾಲಿಸಬೇಕು ಎಂದರು.
|
4 |
+
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈ ಕಾರ್ಯಕ್ರಮದಲ್ಲಿ ಏನು ಹೇಳುತ್ತಾರೆ ಎಂದು ಕೇಳಿಸಿಕೊಂಡು ಬಂದು ನನಗೆ ಹೇಳಲು ಸಚಿವ ಸತೀಶ್ ಜಾರಕಿಹೊಳಿಗೆ ಸೂಚಿಸಿದ್ದೇನೆ. ಸಂಘದಿಂದ ಕೊಟ್ಟಿರುವ ಮನವಿಯಲ್ಲಿ ಗುತ್ತಿಗೆಯಲ್ಲಿ ಪ್ಯಾಕೇಜ್ ಪದ್ಧತಿ ರದ್ದು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮೊನ್ನೆ ರಾಜ್ಯ ಸರ್ಕಾರ ನಾಲ್ಕು ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ರಾಜ್ಯ ಹೆದ್ಧಾರಿಗೆ ಕಾಮಗಾರಿ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಅದರಲ್ಲಿ ಪ್ಯಾಕೇಜ್ ಇಲ್ಲ. ಇದರಿಂದ ಸಣ್ಣ ಗುತ್ತಿಗೆದಾರರಿಗೆ, ರಾಜ್ಯದವರಿಗೆ ಅನುಕೂಲವಾಗಲಿದೆ. ಈ ಹಿಂದೆ ಹೊರ ರಾಜ್ಯದ ಗುತ್ತಿಗೆದಾರರು ರಾಜ್ಯಕ್ಕೆ ಬಂದು ಬಿಟ್ಟಿದ್ದಾರೆ. ಅವರನ್ನೆಲ್ಲಾ ಒಮ್ಮೆಲೆ ಓಡಿಸಲಾಗುವುದಿಲ್ಲ. ಮುಂದೆ ರಾಜ್ಯದ ಗುತ್ತಿಗೆದಾರರಿಗೆ ಆದ್ಯತೆ ನೀಡಲಾಗುವುದು ಎಂದರು.
|
5 |
+
ಕೆಂಪಣ್ಣ ಸರ್ಕಾರ ರಚನೆಯಾದ ಮೇಲೆ ನಾಲ್ಕೈದು ಬಾರಿ ನನ್ನನ್ನು ಭೇಟಿ ಮಾಡಿದ್ದಾರೆ, ಆಗೆಲ್ಲಾ ಪ್ಯಾಕೇಜ್ ರದ್ದು ಮಾಡಬೇಕು, ಬಾಕಿ ಬಿಲ್ ಕೊಡಬೇಕು ಎಂದು ಹೇಳಿದ್ದಾರೆ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಇಷ್ಟು ಬಾಕಿ ಬಿಲ್ ಇರಲಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿ ಜಾಸ್ತಿಯಾಗಿದೆ. ಸರ್ಕಾರದಲ್ಲಿ ಹಣವಿಲ್ಲದಿದ್ದರೂ, ಮಂಡಳಿಗಳಲ್ಲಿ ಅನುಮೋದನೆ ಪಡೆದು 1.20 ಲಕ್ಷ ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಟೆಂಡರ್ ಕರೆದು ಗುತ್ತಿಗೆ ನೀಡಿದ್ದಾರೆ. ಬಾಕಿ ಬಿಲ್ಗಳನ್ನು ಒಮ್ಮೆಲೆ ಬಿಡುಗಡೆ ಮಾಡಿ ಎಂದು ಗುತ್ತಿಗೆದಾರರು ಒತ್ತಾಯಿಸಿದ್ದಾರೆ. ಹಾಗೆ ಹಣ ಬಿಡುಗಡೆ ಮಾಡಲು ನಾನೇನು ನೋಟು ಪ್ರಿಂಟ್ ಮಾಡುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
|
6 |
+
ನಾನು ಸುಳ್ಳು ಹೇಳಲಿಕ್ಕಾವುದಿಲ್ಲ, ಬಾಕಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ. ಗುತ್ತಿಗೆದಾರರು ಕೆಲಸ ಮಾಡಿದ್ದಾರೆ ಅವರದು ತಪ್ಪಿದೆ ಎಂದು ನಾನು ಹೇಳುವುದಿಲ್ಲ. ಆದರೆ ಹಣ ಇಲ್ಲದೆ ಇದ್ದರೂ ಕೆಲಸ ಮಾಡಬಾರದು ಎಂದರು. ಸರ್ಕಾರ ಹೇಳಿದ್ದಕ್ಕೆ ನಾವು ಕೆಲಸ ಮಾಡಿದ್ದೇವೆ ಎಂದು ಗುತ್ತಿಗೆದಾರರು ಹೇಳಿದರು, ಮೂರನೇ ಒಂದು ಭಾಗ ಅನುದಾನ ಲಭ್ಯವಿದ್ದರೆ ಮಾತ್ರ ಕೆಲಸ ಮಾಡಬೇಕು. ಇಲ್ಲದೆ ಹೋದರೆ ನಾನು ಹೇಳಿದರೂ ಕೆಲಸ ಮಾಡಬಾರದು, ಸರ್ಕಾರ ಹೇಳುತ್ತದೆ ಎಂದು ಕೆಲಸ ಮಾಡಿದರೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದರು.
|
7 |
+
ಗುತ್ತಿಗೆದಾರರ ಸಂಘಕ್ಕೆ ಜಾಗ ಕೊಡಿ, ಅಲ್ಲಿ ಗುಣಮಟ್ಟ ಪರಿಶೀಲನಾ ಪ್ರಯೋಗಾಲಯ ಸ್ಥಾಪನೆ ಮಾಡುತ್ತೇವೆ ಎಂದು ಸಂಘದಿಂದ ಮನವಿ ಸಲ್ಲಿಸಲಾಗಿದೆ. ಇದು ಸಂತೋಷದ ವಿಚಾರ, ಸಂಘದ ಪದಾಧಿಕಾರಿಗಳು ಜಾಗ ಹುಡುಕಿಕೊಟ್ಟರೆ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.
|
8 |
+
ವೇದಿಕೆಯಲ್ಲಿ ಮುಖ್ಯಮಂತ್ರಿಗಳ ಬಳಿ ಬಂದ ಕೆಂಪಣ್ಣ ಕಂದಾಯ ಅಧಿಕಾರಿಗಳಿಗೆ ನೀವು ನಿರ್ದೇಶನ ಕೊಟ್ಟರೆ ಅವರು ಐದು ಎಕರೆ ಜಾಗ ಹುಡುಕಿಕೊಡುತ್ತಾರೆ ಎಂದರಲ್ಲದೆ, ಕಂದಾಯ ಭವನ ನಿರ್ಮಾಣಕ್ಕೆ ಇನ್ನೂ 2 ಕೋಟಿ ರೂಪಾಯಿಗಳ ಅಗತ್ಯ ಇದೆ ಎಂದಾಗ, ಸರ್ಕಾರದಿಂದ ಬಾಕಿ ಕೆಲಸ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ಕೆಆರ್ಎಸ್ ಕಟ್ಟಿ ಎಷ್ಟು ವರ್ಷವಾಗಿದೆ. ಈಗಲೂ ಅದು ಸದೃಢವಾಗಿದೆ. ಗುಣಮಟ್ಟ ನಿಯಂತ್ರಣ ಹಾಗೂ ಪಾರದರ್ಶಕತೆ ಪಾಲನೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೇಳಿದರು.
|
9 |
+
ಈ ಹಿಂದೆ ಶೇ.40ರಷ್ಟು ಕಮಿಷನ್ ಲಂಚದ ವಿಚಾರಣೆಗೆ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿತ್ತು. ಆಯೋಗ ಇನ್ನೂ ವರದಿ ನೀಡಿಲ್ಲ, ವರದಿ ಬಂದ ಮೇಲೆ ಶೇ.40ರಷ್ಟು ಕಮಿಷನ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಲೂ ಯಾರಾದರೂ ಕಮಿಷನ್ ಕೇಳುತ್ತಿದರೆ ಸಂತ್ರಸ್ಥ ಗುತ್ತಿಗೆದಾರರು ಆಯೋಗಕ್ಕೆ ದೂರು ನೀಡಿ ಎಂದು ಸಲಹೆ ನೀಡಿದರು.
|
10 |
+
ನಮ್ಮ ಸರ್ಕಾರ ಭ್ರಷ್ಟಚಾರ ಮಟ್ಟ ಹಾಕಿ, ಜನಪರ ಹಾಗೂ ಸರ್ವತೋಮುಖ ಅಭಿವೃದ್ಧಿ ಕೆಲಸ ಮಾಡಲಿದೆ, ಗುತ್ತಿಗೆದಾರ ಸಹಕಾರ ಇಲ್ಲದೆ ಸರ್ಕಾರ ಒಳ್ಳೆಯ ಕೆಲಸ ಮಾಡಲು ಕಷ್ಟವಾಗುತ್ತದೆ. ಗುತ್ತಿಗೆದಾರರ ಯಾವುದೇ ಅಹವಾಲು ಇದ್ದರೂ ಕಾರ್ಯಕ್ರಮದಲ್ಲಿ ಇರುವ ಸಚಿವ ಸತೀಶ್ ಜಾರಕಿಹೊಳಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತನ್ನಿ ಸರ್ಕಾರ ಸ್ಪಂದಿಸಲಿದೆ. ನಾವು ನಿಮ್ಮ ಪರವಾಗಿದ್ದೇವೆ ಎಂದು ಹೇಳಿದರು.
|
11 |
+
ಒಂದೇ ಸಾರಿ ಬಿಲ್ ಕೊಡಲು ಸಾಧ್ಯವಿಲ್ಲ, ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಬಜೆಟ್ನಲ್ಲಿ ಘೋಷಿಸಿತ್ತು. ಈವರೆಗೂ ಒಂದು ಕೂಡ ರೂಪಾಯಿ ಬಿಡುಗಡೆಯಾಗಿಲ್ಲ. ನಾವು ತೆರಿಗೆ ಸಂಗ್ರಹಿಸಿ ಕೊಟ್ಟರೆ ಕೇಂದ್ರ ಸರ್ಕಾರದಿಂದ 13 ಸಾವಿರ ರೂಪಾಯಿ ಮಾತ್ರ ವಾಪಾಸ್ ಬರುತ್ತಿದೆ. ಅದರಲ್ಲಿ ಸಂಬಳ ನೀಡಬೇಕು, ಬೇರೆಲ್ಲಾ ಕೆಲಸ ಮಾಡಬೇಕಿದೆ, ಜೊತೆಗೆ ಅಭಿವೃದ್ಧಿಯನ್ನೂ ಮಾಡಬೇಕು ಎಂದು ಹೇಳಿದರು.
|
12 |
+
ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಗುತ್ತಿಗೆದಾರರ ಸಂಘದ ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಅಧಿಕಾರಿಗಳು ಬೇಕಾದಂತೆ ಷರತ್ತು ಹಾಕಿ, ತಮಗೆ ಬೇಕಾದವರಿಗೆ ಗುತ್ತಿಗೆ ಸಿಗುವಂತೆ ಮಾಡುತ್ತಿದ್ದಾರೆ ಅದನ್ನು ತಪ್ಪಿಸಬೇಕು. ವಿವಿಧ ಇಲಾಖೆಗಳಲ್ಲಿ 18 ಸಾವಿರ ಕೋಟಿ ರೂಪಾಯಿ ಬಿಲ್ ಬಾಕಿ ಇದೆ, ಅದನ್ನು ತಕ್ಷಣವೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಜನರಿಗೆ ಭಾಗ್ಯ ಕೊಟ್ಟಂತೆ, ಗುತ್ತಿಗೆದಾರರಿಗೂ ಯಾವುದಾರೂ ಒಂದು ಭಾಗ್ಯ ನೀಡಬೇಕು. ನಿರ್ಮಿತಿ ಕೇಂದ್ರದಿಂದಲೇ ಭ್ರಷ್ಟಚಾರ ಆರಂಭವಾಗುತ್ತಿದೆ. ಅದನ್ನು ಸರಿ ಪಡಿಸಬೇಕು, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಹಾಗೂ ಜಿಎಸ್ಟಿಯಿಂದಾಗುತ್ತಿರುವ ಸಮಸ್ಯೆಗಳನ್ನು ಬಗೆ ಹರಿಸಬೇಕು ಎಂದು ಮನವಿ ಮಾಡಿದರು.
|
13 |
+
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಸತಿ ಸಚಿವ ಜಮೀರ ಅಹಮದ್ ಖಾನ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
|
eesanje/url_46_214_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಮರ್ಪಕ ಬರ ನಿರ್ವಹಣೆಗೆ ಸಿಎಂ ಸೂಚನೆ
|
2 |
+
ಬೆಂಗಳೂರು,ಮಾ.5- ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ ಸೃಷ್ಟಿ ಹಾಗೂ ಮೇವಿನ ಕೊರತೆಯಾಗದಂತೆ ಬರ ನಿರ್ವಹಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಹಾಗೂ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳು ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ವಿಡಿಯೋ ಕಾನರೆನ್ಸ್ ಮೂಲಕ ಸಭೆ ನಡೆಸಿದ ಮುಖ್ಯಮಂತ್ರಿಯವರು ಮಹತ್ವದ ಸೂಚನೆಗಳನ್ನ ನೀಡಿದ್ದಾರೆ.
|
3 |
+
ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದ್ದು, ಜಿಲ್ಲಾಡಳಿತ ಕೈ ಕಟ್ಟಿ ಕುಳಿತಿರುವುದೇಕೆ ಎಂದು ಈ ಸಂದರ್ಭದಲ್ಲಿ ಅಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯಸರ್ಕಾರ ಸುಮಾರು 900 ಕೋಟಿ ರೂ.ಗಳನ್ನು ಕುಡಿಯುವ ನೀರು ಸೇರಿದಂತೆ ಬರ ನಿರ್ವಹಣೆಗಾಗಿ ಬಿಡುಗಡೆ ಮಾಡಿದೆ. ಆದರೆ ಅದರ ಬಳಕೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ.
|
4 |
+
ಈ ಹಿಂದಿನಿಂದಲೂ ಟ್ಯಾಂಕರ್ನಲ್ಲಿ ನೀರು ಪೂರೈಸಿದ ಬಿಲ್ ಪಾವತಿಯಾಗಿಲ್ಲ. ಹೀಗಾಗಿ ಹೊಸ ಬಿಲ್ಗಳ ಪಾವತಿಗೆ ತಾಂತ್ರಿಕ ಸಮಸ್ಯೆ ಇದೆ ಎಂದು ಕೆಲ ಅಧಿಕಾರಿಗಳು ಸಬೂಬು ಹೇಳಿದರು ಎಂದು ಮೂಲಗಳು ತಿಳಿಸಿವೆ. ಅವೈಜ್ಞಾನಿಕವಾಗಿ ಈ ಹಿಂದೆ ನೀರು ಪೂರೈಕೆ ಹಾಗೂ ಇತರೆ ಬಿಲ್ಗಳನ್ನು ಸೃಷ್ಟಿಸಲಾಗಿತ್ತು ಎಂಬ ಆರೋಪಗಳಿವೆ. ಅದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವಿಲ್ಲ. ಬರ ಪರಿಸ್ಥಿತಿ ತೀವ್ರಗೊಂಡಿರುವ ಪ್ರಸ್ತುತ ದಿನಮಾನದಲ್ಲಿ ನವೆಂಬರ್ ನಂತರ ನೀರು ಪೂರೈಸುವ ಟ್ಯಾಂಕರ್ಗಳಿಗೆ 15 ದಿನಗಳಿಗೊಮ್ಮೆ ಬಿಲ್ ಪಾವತಿಸಬೇಕು ಎಂದು ಸೂಚಿಸಿದ್ದಾರೆ.
|
5 |
+
ಉದ್ಯೋಗ ಸೃಷ್ಟಿಗೆ ನರೇಗಾ ಯೋಜನೆಯಡಿ ಲಭ್ಯವಿರುವ ಅನುದಾನಗಳನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಬೇಕು. 100 ದಿನಗಳ ಮಾನವ ಉದ್ಯೋಗ ಒದಗಿಸಲಾಗುತ್ತದೆ. ಅದನ್ನು 150 ದಿನಗಳಿಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೂ ಅಲ್ಲಿಂದ ಯಾವುದೇ ಅನುಮೋದನೆ ದೊರೆತಿಲ್ಲ. ಏಪ್ರಿಲ್ ಬಳಿಕವೂ ಕೇಂದ್ರದ ಸಹಮತ ದೊರೆಯದೇ ಇದ್ದರೆ ರಾಜ್ಯಸರ್ಕಾರವೇ ತನ್ನ ಆರ್ಥಿಕ ಇತಿಮಿತಿಯಲ್ಲಿ ಮಾನವ ದಿನಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಈ ವೇಳೆ ಭರವಸೆ ನೀಡಿದ್ದಾರೆ.
|
6 |
+
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು ಎಂದು ಸೂಚಿಸಿದ ಮುಖ್ಯಮಂತ್ರಿಗಳು, ಬ್ಯಾಂಕ್ ಸಾಲ ವಸೂಲಾತಿಗೆ ಆತುರ ತೋರಿಸದಂತೆ ಆಯಾ ಜಿಲ್ಲಾಕಾರಿಗಳು ಬ್ಯಾಂಕರ್ಗಳಿಗೆ ತಿಳುವಳಿಕೆ ನೀಡುವಂತೆಯೂ ಸಲಹೆ ನೀಡಿದ್ದಾರೆ. ಕೆಲವು ಕಡೆ ಬ್ಯಾಂಕ್ ನೋಟಿಸ್ಗಳಿಂದಾಗಿ ಆತಂಕಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ವರದಿಯಾಗಿವೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ್ದಾರೆ.
|
7 |
+
ಬರ ನಿರ್ವಹಣೆಯನ್ನು ಸಮರೋಪಾದಿಯಲ್ಲಿ ನಿಭಾಯಿಸಬೇಕು. ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಇಂಧನ ಸೇರಿದಂತೆ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ತಾಕೀತು ಮಾಡಿದ್ದಾರೆ. ಬಹಳಷ್ಟು ಜಿಲ್ಲೆಗಳಿಂದ ಉಸ್ತುವಾರಿ ಸಚಿವರು ಆನ್ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಬರ ನಿರ್ವಹಣೆ ಕಾಮಗಾರಿಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿ, ಕಾಲಕಾಲಕ್ಕೆ ಸರ್ಕಾರಕ್ಕೆ ವರದಿ ನೀಡುವಂತೆ ಮುಖ್ಯಮಂತ್ರಿ ಇದೇ ವೇಳೆ ಆದೇಶಿಸಿದ್ದಾರೆ.
|
eesanje/url_46_214_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿಎಂ ಗೃಹ ಕಚೇರಿಗೂ ತಟ್ಟಿದ ನೀರಿನ ಬವಣೆ
|
2 |
+
ಬೆಂಗಳೂರು,ಮಾ.5- ಬರ ಪರಿಸ್ಥಿತಿಯಿಂದಾಗಿ ರಾಜ್ಯನ್ನು ಕಾಡುತ್ತಿರುವ ನೀರಿನ ಬವಣೆಯ ಬಿಸಿ ಮುಖ್ಯಮಂತ್ರಿ ಗೃಹಕಚೇರಿಗೂ ತಟ್ಟಿದೆ. ಬೆಂಗಳೂರಿನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವು ದರಿಂದಾಗಿ ಇದೇ ಮೊದಲ ಬಾರಿಗೆ ಪಿಡಬ್ಲ್ಯೂಎಸ್ಎಸ್ಬಿ ಟ್ಯಾಂಕರ್ ಮೂಲಕ ಗೃಹಕಚೇರಿ ಕೃಷ್ಣಾಗೆ ನೀರು ಸರಬರಾಜು ಮಾಡಲಾಗಿದೆ.
|
3 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಹಾಗೂ ಜಿಲ್ಲಾಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ಮೂಲಕ ನೀರಿನ ಬವಣೆ ಹಾಗೂ ಭರ ನಿರ್ವಹಣೆಯ ಬಗ್ಗೆ ಚರ್ಚೆ ನಡೆಸಲು ಸಭೆ ನಿಗದಿಯಾಗಿತ್ತು. ಅದಕ್ಕೂ ಮೊದಲು ಗೃಹಕಚೇರಿ ಕೃಷ್ಣಾಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಯಿತು.
|
4 |
+
ರಾಜ್ಯಾದ್ಯಂತ ಈಗಾಗಲೇ 300 ಕ್ಕೂ ಹೆಚ್ಚು ಗ್ರಾಮೀಣ ಪ್ರದೇಶಗಳು ಹಾಗೂ 700 ಕ್ಕೂ ಹೆಚ್ಚು ನಗರ ವಾರ್ಡ್ಗಳಲ್ಲಿ ನೀರಿನ ಸಮಸ್ಯೆಯಿದ್ದು, ಟ್ಯಾಂಕರ್ ಮೂಲಕ ಪೂರೈಸಲಾಗುತ್ತಿದೆ. ಇನ್ನೂ ಕೆಲವು ಕಡೆ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ. ಬೆಂಗಳೂರಿನಲ್ಲಿ ನೀರು ಪೂರೈಕೆಯ ಟ್ಯಾಂಕರ್ಗಳನ್ನು ನೋಂದಣಿ ಮಾಡಿಕೊಳ್ಳಬೇಕು. ಮನಸೋ ಇಚ್ಛೆ ಹಣ ವಸೂಲಿ ಮಾಡುವಂತಿಲ್ಲ ಎಂದು ಸರ್ಕಾರ ನಿರ್ದೇಶನ ನೀಡಿದೆ.
|
5 |
+
ಮಾ.7 ರವರೆಗೆ ಟ್ಯಾಂಕರ್ ನೋಂದಣಿಯನ್ನು ನೀಡಲಾಗಿದ್ದು, ಅದೇ ದಿನ ನೀರು ಪೂರೈಕೆಯ ದರ ನಿಗದಿ ಮಾಡುವ ಸಾಧ್ಯತೆಯಿದೆ. ಭವಿಷ್ಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳನ್ನು ಸೇರಿ ಸುಮಾರು 7 ಸಾವಿರ ಜನವಸತಿ ಪ್ರದೇಶಗಳಲ್ಲಿ ನೀರಿನ ಸಮಸ್ಯೆಯಾಗುವ ಅಂದಾಜಿದೆ. ಅಲ್ಲಿಗೆ ಟ್ಯಾಂಕರ್ ಮೂಲಕ ಮತ್ತು ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲು ಮೇಲಿಂದ ಮೇಲೆ ಸಭೆ ನಡೆಸಲಾಗುತ್ತಿದೆ.
|
6 |
+
ಅದರ ಹೊರತಾಗಿಯೂ ಅಲ್ಲಲ್ಲಿ ನೀರಿಲ್ಲದೆ ಜನಸಾಮಾನ್ಯರು ಖಾಲಿ ಕೊಡಗಳನ್ನು ಹಿಡಿದುಕೊಂಡು ಪ್ರತಿಭಟಿಸುತ್ತಿರುವುದು, ಪರದಾಡುತ್ತಿರುವುದು ಕಂಡುಬರುತ್ತಿದೆ. ಜನಸಾಮಾನ್ಯರ ಪರಿಸ್ಥಿತಿ ಈ ರೀತಿಯಾದರೆ ರಾಜ್ಯಾಂಗದ ಅಕಾರ ಹಿಡಿದಿರುವ ಸಿಎಂ ಅವರ ಕಚೇರಿಯಲ್ಲೂ ನೀರಿನ ಬವಣೆ ಅಚ್ಚರಿ ಮೂಡಿಸಿದೆ.
|
eesanje/url_46_214_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ
|
2 |
+
ಬೆಂಗಳೂರು,ಮಾ.4- ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸಿರುವಂತೆ ಖಾಸಗಿ ಸುದ್ದಿ ವಾಹಿನಿ ಯೊಂದು ನಡೆಸಿರುವ ಸಮೀಕ್ಷೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್ಡಿಎ ಮೈತ್ರಿಕೂಟ 24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇಂಡಿಯಾ ಟಿವಿ ಸಿಎನ್ಎಕ್ಸ್ ಸಹಭಾಗಿತ್ವದಲ್ಲಿ ನಡೆಸಿರುವ ದಕ್ಷಿಣ ಭಾರತ 130 ಲೋಕಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ 60 ಸ್ಥಾನ ಹಾಗೂ ಎನ್ಡಿಎ ಮೈತ್ರಿಕೂಟ 38 ಹಾಗೂ 32 ಕ್ಷೇತ್ರಗಳು ವೈಎಸ್ಆರ್ ಕಾಂಗ್ರೆಸ್, ಟಿಡಿಪಿ, ಎಐಎಡಿಎಂಕೆ, ಬಿಆರ್ಎಸ್, ಎಐಎಂಐಎಂ ಪಕ್ಷಗಳ ಪಾಲಾಗಲಿವೆ ಎಂದು ಸಮೀಕ್ಷೆ ತಿಳಿಸಿದೆ.
|
3 |
+
ಉತ್ತರಭಾರತದಲ್ಲಿ ಬಿಜೆಪಿಗೆ ಭಾರೀ ಬಹುಮತ ಸಿಗುವ ಸಾಧ್ಯತೆ ಇದ್ದರೆ, ಇದಕ್ಕೆ ವ್ಯತಿರಿಕ್ತ ಎಂಬಂತೆ ದಕ್ಷಿಣ ಭಾರತದಲ್ಲಿ ಬಿಜೆಪಿ ಕರ್ನಾಟಕ, ತೆಲಂಗಾಣ, ಗೋವಾ ಮತ್ತು ತಮಿಳುನಾಡಿನಲ್ಲಿ ಖಾತೆ ತೆರೆಯುವ ಸಂಭವವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಎನ್ಡಿ ಮೈತ್ರಿಕೂಟ 24 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡರೆ ಆಡಳಿತಾರೂಢ ಕಾಂಗ್ರೆಸ್ 4 ಸ್ಥಾನಗಳನ್ನು ಮಾತ್ರ ಗೆಲ್ಲಬಹುದೆಂದು ಚುನಾವಣಾಪೂರ್ವ ಸಮೀಕ್ಷೆ ಹೇಳಿದೆ.
|
4 |
+
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಪ್ರಧಾನಿ ನರೇಂದ್ರಮೋದಿ ಅವರ ವರ್ಚಸ್ಸಿನ ಪರಿಣಾಮ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವ ಲಕ್ಷಣಗಳಿದ್ದು, ಕಾಂಗ್ರೆಸ್ಗೆ ಆಂತರಿಕ ಸಮಸ್ಯೆಗಳೇ ಹಿನ್ನಡೆ ಕಾರಣ ಎಂದು ತಿಳಿಸಿದೆ. ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದ್ದರೆ ಉಳಿದ ಕಡೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವಿನ ರಣಕೇಕೆ ಹಾಕಲಿದೆ.
|
5 |
+
ಇನ್ನು ವಲಯವಾರು ಸಮೀಕ್ಷೆಯನ್ನು ಗಮನಿಸಿದರೆ ಉತ್ತರ ಕರ್ನಾಟಕದ 11 ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯೂ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದರೆ, ಕಾಂಗ್ರೆಸ್ 2 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಹೇಳಲಾಗಿದೆ. ಕರಾವಳಿಯಲ್ಲಿ ಮೂರು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ದಕ್ಷಿಣ ಕರ್ನಾಟಕದ 10 ಕ್ಷೇತ್ರಗಳಲ್ಲಿ ಪೈಕಿ ಬಿಜೆಪಿ – ಜೆಡಿಎಸ್ ಮೈತ್ರಿ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎನ್ನಲಾಗಿದೆ.
|
6 |
+
ಇನ್ನು, ಬೆಂಗಳೂರಿನ ನಾಲ್ಕು ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಹಾಗೂ ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಕಾಂಗ್ರೆಸ್ ಮೂರು ಕ್ಷೇತ್ರಗಳ ಗಳಿಕೆ ಮಾಡಲಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಕೂಡ ಒಂದು ಸ್ಥಾನವನ್ನು ಹೆಚ್ಚು ಗಳ��ಸಲಿದೆ.
|
7 |
+
ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ತುಮಕೂರಿನಲ್ಲಿ ಗೆಲ್ಲುವ ಸಾಧ್ಯತೆ ಇದೆ. ಜೆಡಿಎಸ್ ಹಾಸನ ಹಾಗೂ ಮಂಡ್ಯದಲ್ಲಿ ಗೆಲುವು ಸಾಸಲಿದ್ದು, ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಾಣಲಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ಭಾರೀ ಮುನ್ನಡೆ ಸಾಧಿಸಿದರೆ ಕೇರಳದಲ್ಲಿ ಎಲ್ಡಿಎಫ್, ತೆಲಂಗಾಣದಲ್ಲಿ ಕಾಂಗ್ರೆಸ್, ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ಕೇವಲ ದಕ್ಷಿಣ ಭಾರತದ 130 ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಸಮೀಕ್ಷೆ ನಡೆಸಲಾಗಿದೆ.
|
eesanje/url_46_214_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿಗೆ ಬಿಗ್ ರಿಲೀಫ್
|
2 |
+
ನವದೆಹಲಿ,ಮಾ.5- ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಗೆಲುವು ತಂದುಕೊಟ್ಟಂತಾಗಿದೆ.
|
3 |
+
ಇಡಿ ಅಧಿಕಾರಿಗಳು ತಮ್ಮ ವಿರುದ್ಧ ದಾಖಲಿಸಿದ್ದ 120ಬಿ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ-ವಿವಾದವನ್ನು ಆಲಿಸಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಏಕಸದಸ್ಯ ಪೀಠ ಇಡಿ ದಾಖಲಿಸಿದ್ದ ದೂರನ್ನು ರದ್ದುಗೊಳಿಸಿ ವಿಚಾರಣೆಗೆ ತಡೆ ನೀಡಿತು.
|
4 |
+
ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಸಮನ್ಸ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಡಿಕೆಶಿ ವಿರುದ್ದ ಸೆಕ್ಷನ್ 120ಬಿ ಆರೋಪವಿದೆ. ಇದರ ಜತೆಗೆ ಮತ್ತೊಂದು ಅಧಿಸೂಚಿತ ಕೇಸ್ ಇರಬೇಕೆಂದಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ದೆಹಲಿಯ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದ ಸಮಯದಲ್ಲಿ ಸುಮಾರು 8.59 ಕೋಟಿ ರೂ. ಹಣ ಜಪ್ತಿ ಮಾಡಲಾಗಿತ್ತು.
|
5 |
+
ಈ ಹಣ ಅಕ್ರಮವೋ ಅಥವಾ ಸಕ್ರಮವೋ ಎಂಬ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಬೇಕಿತ್ತು.ಈ ಕುರಿತು ತನಿಖೆ ನಡೆಸುವ ಸಲುವಾಗಿ ಇಡಿ ನೀಡಿದ್ದ ಸಮನ್ಸ್ ವಿರುದ್ಧ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಹಣ ತನಿಖೆಗೆ ಯೋಗ್ಯ ಎಂದು ಹೈಕೋರ್ಟ್ ಹೇಳಿತ್ತು.
|
eesanje/url_46_214_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಾಕ್ ಪರ ಘೋಷಣೆ ಪ್ರಕರಣ, ಬಂಧಿತ ಮೂವರ ತೀವ್ರ ವಿಚಾರಣೆ
|
2 |
+
ಬೆಂಗಳೂರು, ಮಾ.5- ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಾದ ಮಹಮ್ಮದ್ ಶಫಿ ನಾಶಿಪುಡಿ, ಮುನ್ನಾವರ ಅಹಮದ್, ಮಹಮ್ಮದ್ ಇಲ್ತಾಜ್ ಎಂಬುವವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂದಿಸಿ ಕೋರಮಂಗಲದ 39ನೇ ಎಸಿಎಂಎಂ ನ್ಯಾಯಾದೀಶರ ಮುಂದೆ ಹಾಜರು ಪಡಿಸಿದಾಗ ನ್ಯಾಯಾದೀಶರು ಆರೋಪಿಗಳನ್ನು ಮಾ.6ರವರೆಗೆ ಪೊಲೀಸರ ಕಸ್ಟಡಿಗೆ ನೀಡಿದರು.
|
3 |
+
ಈ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳ ಪೂರ್ವಪರ ಪರಿಶೀಲನೆ ಪಾಕ್ ಪರ ಘೋಷಣೆ ಹಿಂದಿನ ಉದ್ದೇಶ ಏನಾಗಿತ್ತು ಇದಕ್ಕೆ ಯಾರಾದರೂ ಕುಮ್ಮಕ್ಕು ನೀಡಿದ್ದಾರಾ, ಇದು ಆಕಸ್ಮಿಕವೇ ಅಥವಾ ಉದ್ದೇಶಪೂರ್ವಕವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
|
4 |
+
ಬಂಧಿತರ ಮೂವರ ಮೊಬೈಲ್ಗಳನ್ನು ವಶಕ್ಕೆ ತೆಗೆದುಕೊಂಡು ವಿಧಿವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಎಪ್ಎಸ್ಎಲ್ ವರದಿಯಲ್ಲಿ ದೃಡಪಡುತ್ತಿದ್ದಂತೆ ವಿಧಾನಸೌಧ ಪೊಲೀಸರು 40ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಿ 15 ಮಂದಿಯ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದರು. ನಿನ್ನೆ ಮಧ್ಯಾಹ್ನ ಪೊಲೀಸರ ಕೈಗೆ ಎಪ್ಎಸ್ಎಲ್ ವರದಿ ಸಿಗುತ್ತಿದ್ದಂತೆ ಘೋಷಣೆ ಕೂಗಿದ ಮೂವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
|
5 |
+
ಫೆ. 27ರಂದು ರಾಜ್ಯಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ನಾಸೀರ್ ಹುಸೇನ್ ವಿಜಯೋತ್ಸವ ಆಚರಣೆ ವೇಳೆ ಪಾಕ್ ಪರ ಘೋಷಣೆಗಳು ಕೇಳಿಬಂದಿದ್ದವು. ಮಾಧ್ಯಮಗಳಲ್ಲಿ ಭಾರಿ ಪ್ರಮಾಣದ ಸುದ್ದಿ ಬಿತ್ತರವಾಗಿತ್ತು. ಪಾಕ್ ಪರ ಘೋಷಣೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ವಿಧಾನಸೌಧ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ಕೈಗೆತ್ತಿಕೊಂಡಿದ್ದರು.
|
6 |
+
ಕೋಟಿ ಕುಳ ನಾಶಿ ಪುಡಿ:ಮೊಹಮ್ಮದ್ ಶಪಿ ನಾಶಿ ಪುಡಿ ಸಾಮಾನ್ಯ ವ್ಯಕ್ತಿಯಲ್ಲ. ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಮೆಣಸಿನ ಕಾಯಿ ವ್ಯಾಪಾರ ಮಾಡುವ ಕೋಟ್ಯಾಂತರ ವ್ಯವಹಾರ ನಡೆಸುತ್ತಿರುವವರೆಂದು ಪೊಲೀಸ್ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಇವರನ್ನು ಧ್ವನಿ ಪರೀಕ್ಷೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಂದರ್ಭದಲ್ಲಿ ನಾನು ನೂರಾರು ಕೋಟಿಗೆ ಬಾಳುತ್ತೇನೆ, ನಾನು ಪಾಕ್ ಪರ ಘೋಷಣೆ ಕೂಗಿಲ್ಲ, ಎಂದು ಹೇಳಿರುವುದು ತಿಳಿದು ಬಂದಿದೆ.
|
7 |
+
ನಾಶಿಪುಡಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಕಟ್ಟಾ ಬೆಂಬಲಿಗನಾಗಿದ್ದು, ಮುಂದಿನ ವಿಧಾನಸಭೆಯ ಬ್ಯಾಡಗಿ ಕ್ಷೇತ್ರದ ಚುನಾವಣೆಗೆ ಸ್ಪರ್ದಿಸಲು ಈಗಿನಿಂದಲೇ ಬಾರಿ ಸಿದ್ದತೆ ನಡೆಸಿದ್ದ ಸುಮಾರು 50 ವರ್ಷಗಳಿಂದ ಮೆಣಸಿಕಾಯಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದಾನೆ. ���ಾಜ್ಯಸಭೆ ಚುನಾವಣೆಯ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಪ್ರಕರಣದಲ್ಲಿ ಈತ ಮೊದಲನೇ ಆರೋಪಿ.
|
8 |
+
ದೆಹಲಿ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಇಲ್ತಾಜ್:ಇಲ್ತಾಜ್ ದೆಹಲಿ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ ನಾಸೀರ್ ಹುಸೇನ್ ಅವರ ಕಟ್ಟ ಬೆಂಬಲಿಗ. ರಾಜ್ಯಸಭೆ ಚುನಾವಣೆಯ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಆಗಮಿಸಿದ್ದ. ಪಾಕ್ ಜಿಂದಾಬಾದ್ ಘೋಷಣೆಯಲ್ಲಿ ಈತ ಎರಡನೇ ಆರೋಪಿಯಾಗಿದ್ದಾನೆ.
|
9 |
+
ಜಯಮಹಲ್ನ ಮುನಾವರ್:ಮೊದಲು ಆರ್ಟಿ ನಗರದಲ್ಲಿ ವಾಸವಾಗಿದ್ದ ಈತ ಇತ್ತೀಚೆಗೆ ಜಯಮಹಲ್ನಲ್ಲಿ ನೆಲೆಸಿದ್ದ ಸಣ್ಣ-ಪುಟ್ಟ ವ್ಯಾಪಾರಗಳನ್ನು ಮಾಡಿಕೊಂಡಿದ್ದಾನೆ. ಪಾಕ್ ಪರ ಜಿಂದಾಬಾದ್ ಘೋಷಣೆ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ಆರೋಪಿಗಳನ್ನು ಬಂಸಿರುವ ಪೆÇಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
|
eesanje/url_46_214_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸುಧೀರ್ ಕುಮಾರ್ ಮುರೊಳ್ಳಿಗೆ ಲೋಕಸಭಾ ಟಿಕೆಟ್ಗಾಗಿ ತೀವ್ರಗೊಂಡ ಲಾಬಿ
|
2 |
+
ಬೆಂಗಳೂರು,ಮಾ.5- ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸುಧೀರ್ ಮುರೋಳಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಜಿಲ್ಲೆಗಳ ನಾಯಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆಯವರು ಇತ್ತೀಚೆಗೆ ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಗಳಿವೆ. ಜಯಪ್ರಕಾಶ್ ಹೆಗ್ಡೆಯವರಿಗೆ ಟಿಕೆಟ್ ನೀಡಲು ಸ್ಥಳೀಯ ವಾಗಿ ತೀವ್ರ ವಿರೋಧ ವ್ಯಕ್ತವಾಗಿದೆ.
|
3 |
+
ಎರಡೂ ಜಿಲ್ಲೆಗಳ ಕಾಂಗ್ರೆಸ್ ನಾಯಕರು ಒಟ್ಟಾಗಿ ಮುಖ್ಯಮಂತ್ರಿ ಯವರ ಬಳಿ ನಿಯೋಗ ಬಂದಿದ್ದು, ಕಾಂಗ್ರೆಸ್ ಪಕ್ಷದಲ್ಲೇ ಇರುವ ಹಾಗೂ ಸ್ಥಳೀಯರಾದ ಸುಧೀರ್ ಮುರೋಳಿ ಟಿಕೆಟ್ ನೀಡಬೇಕೆಂದು ಒತ್ತಡ ಹೇರಿದ್ದಾರೆ. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ, ವಿನಯ್ಕುಮಾರ್ ಸೊರಕೆ, ಕಾಂಗ್ರೆಸ್ ನಾಯಕರಾದ ಕಾರ್ಕಳದ ಉದಯ್ಕುಮಾರ್ ಶೆಟ್ಟಿ, ಕುಂದಾಪುರದ ದಿನೇಶ್ ಹೆಗ್ಡೆ, ಉಡುಪಿಯ ರಮೇಶ್ ಕಾಂಚನ್, ಉಡುಪಿಯ ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸೌರವ್ ಬಲ್ಲಾಳ್, ಉಡುಪಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಉಮಾ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ನಿಯೋಗ ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದೆ.
|
4 |
+
ಜಯಪ್ರಕಾಶ್ ಹೆಗ್ಡೆ ಈ ಮೊದಲು ಬಿಜೆಪಿ ಸೇರಿದ್ದರು. ಯಡಿಯೂರಪ್ಪ ಸರ್ಕಾರ ಅವರನ್ನು ಹಿಂದುಳಿದ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಆ ಬಳಿಕ ಜಯಪ್ರಕಾಶ್ ಹೆಗ್ಡೆ ಸಕ್ರಿಯ ರಾಜಕೀಯದಿಂದ ವಿಮುಖರಾಗಿದ್ದರು. ಸ್ವಾಯತ್ತ ಸಂಸ್ಥೆಯಾಗಿರುವ ಹಿಂದುಳಿದ ವರ್ಗಗಳ ಆಯೋಗದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು.
|
5 |
+
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಿಷಯವಾಗಿ ಒಂದಿಷ್ಟು ಗೊಂದಲಗಳಿವೆ. ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಕ್ಷೇತ್ರದಲ್ಲಿ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಿ.ಟಿ.ರವಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಗೊಂದಲದ ನಡುವೆ ಜಯಪ್ರಕಾಶ್ ಹೆಗ್ಡೆ ತಮಗೂ ಟಿಕೆಟ್ ನೀಡಿ ಎಂದು ಹಿರಿಯ ನಾಯಕರ ಮುಂದೆ ಮನವಿ ಸಲ್ಲಿಸಿದ್ದರು ಎನ್ನಲಾಗಿದೆ.
|
6 |
+
ಅತ್ತ ಬಿಜೆಪಿಯಲ್ಲೂ ಪ್ರಯತ್ನ ಮಾಡುತ್ತಾ, ಇತ್ತ ಕಾಂಗ್ರೆಸ್ನಲ್ಲೂ ಸ್ರ್ಪಧಿಸುವುದಾಗಿ ಸುದ್ದಿ ಹರಡಿ ಗೊಂದಲ ಮೂಡಿಸುತ್ತಿದ್ದಾರೆ. ಅವರನ್ನು ಸೇರಿಸಿಕೊಳ್ಳುವುದಾದರೆ ಅದು ಹೈಕಮಾಂಡ್ ಇಷ್ಟ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಲೋಕಸಭೆ ಚ��ನಾವಣೆಗೆ ಅಭ್ಯರ್ಥಿಯಾಗಿ ಮಾಡುವುದು ಸರಿಯಲ್ಲ. ಪಕ್ಷ ನಿಷ್ಠರಿಗೆ ಹಾಗೂ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಲಾಗಿದೆ.
|
7 |
+
ವಲಸಿಗ ನಾಯಕರಿಗೆ ಮಣೆ ಹಾಕಿದರೆ ಪಕ್ಷ ನಿಷ್ಠರು ವಿಶ್ವಾಸ ಕಳೆದುಕೊಳ್ಳುತ್ತಾರೆ. ಹೀಗಾಗಿ ಕಾಂಗ್ರೆಸ್, ಪಕ್ಷದ ಸಿದ್ದಾಂತ, ವೈಚಾರಿಕತೆ ಹಾಗೂ ಕಾರ್ಯಕ್ರಮಗಳ ಮೇಲೆ ನಂಬಿಕೆ ಇಟ್ಟವರನ್ನು ಪರಿಗಣಿಸಬೇಕು. ಅಧಿಕಾರಕ್ಕಾಗಿ ಪದೇಪದೇ ಪಕ್ಷ ಬದಲಾಯಿಸುವವರಿಗೆ ಮಣೆ ಹಾಕಬಾರದು. ಸ್ಥಳೀಯರ ಭಾವನೆಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ನಿರ್ಧಾರ ತೆಗೆದುಕೊಂಡಿದ್ದೇ ಆದರೆ ಲೋಕಸಭೆ ಚುನಾವಣೆಯಲ್ಲಿ ಆಗುವ ಪರಿಣಾಮಗಳಿಗೆ ನಾವು ಹೊಣೆಯಾಗುವುದಿಲ್ಲ ಎಂದು ನಿಯೋಗದ ನಾಯಕರು ಎಚ್ಚರಿಸಿದ್ದಾರೆ ಎನ್ನಲಾಗಿದೆ.
|
eesanje/url_46_214_9.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಹೇಳಿದಂತೆಲ್ಲಾ ಕ್ರಮ ಕೈಗೊಳ್ಳಲಾಗುವುದಿಲ್ಲ : ಗೃಹಸಚಿವ ಪರಮೇಶ್ವರ್
|
2 |
+
ಬೆಂಗಳೂರು,ಮಾ.5-ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲಿ ಖಚಿತವಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸರ್ಕಾರ ಸಂದರ್ಭೋಚಿತವಾಗಿ ನಡೆದುಕೊಂಡಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ನಿಜ. ಆದರೆ ಯಾರು ಕೂಗಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಅದರ ಕುರಿತಂತೆ ತನಿಖೆ ನಡೆಯುತ್ತಿದೆ. ಮೂವರು ಆರೋಪಿಗಳನ್ನು ನಿನ್ನೆ ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದುಕೊಂಡಿದ್ದೇವೆ. ಇಷ್ಟೇ ಜನ ಇದ್ದಾರೆಯೇ ಅಥವಾ ಬೇರೆಯವರು ಭಾಗಿಯಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸುತ್ತೇವೆ ಎಂದರು.
|
4 |
+
ಎಫ್ಎಸ್ಎಲ್ ವರದಿಯನ್ನು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿರುವುದರಿಂದ, ವರದಿಯನ್ನು ಬಹಿರಂಗಪಡಿಸುವ ಅಗತ್ಯ ಏನಿದೆ. ನಾನೇ ಸ್ಪಷ್ಟವಾಗಿ ಹೇಳುತ್ತಿದ್ದೇನೆ, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. ಅದನ್ನು ಖಚಿತಪಡಿಸಿಕೊಂಡ ಬಳಿಕವೇ ನಾವು ಕ್ರಮ ಕೈಗೊಂಡಿದ್ದೇವೆ. ವಿರೋಧಪಕ್ಷಗಳು ಹೇಳಿದಾಕ್ಷಣ ಸಾಕ್ಷ್ಯ ಆಧಾರವಿಲ್ಲದೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪುನರ್ ಉಚ್ಚರಿಸಿದರು.
|
5 |
+
ಘಟನೆಗೆ ಸಂಬಂಧಪಟ್ಟಂತೆ ಗೃಹಸಚಿವನಾಗಿ ನಾನು ಅಥವಾ ನಮ್ಮ ಇಲಾಖೆಯ ಡಿಜಿಪಿ, ಪೊಲೀಸ್ ಆಯುಕ್ತರು ನೀಡುವ ಹೇಳಿಕೆಗಳು ಮಾತ್ರ ಅಧಿಕೃತ. ಉಳಿದಂತೆ ಬೇರೆಯವರಿಗೆ ಹೆಚ್ಚಿನ ಮಾಹಿತಿಗಳು ಇರುವುದಿಲ್ಲ. ಅವರು ಏನೇ ಹೇಳಿದರೂ ಅದು ವೈಯಕ್ತಿಕ ಅಭಿಪ್ರಾಯಗಳು ಮಾತ್ರ ಎಂದರು.
|
6 |
+
ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ಬಿಜೆಪಿಯವರು ಹೇಳಿದಂತೆಲ್ಲಾ ಕ್ರಮ ಕೈಗೊಳ್ಳಲಾಗುವುದಿಲ್ಲ. ರಾಜ್ಯದಲ್ಲಿ ಕಾನೂನು ನಿಯಮಗಳು ಅಸ್ತಿತ್ವದಲ್ಲಿವೆ ಎಂದರು. ಈ ಘಟನೆಯಲ್ಲಿ ಸರ್ಕಾರಕ್ಕೆ ಯಾವುದೇ ಮುಜುಗರವಾಗಿಲ್ಲ. ಪಾಕ್ ಪರ ಘೋಷಣೆ ಕೂಗಲು ಸರ್ಕಾರವೇನು ಪ್ರಾಯೋಜಕತ್ವ ನೀಡಿರಲಿಲ್ಲ. ಘೋಷಣೆ ಖಚಿತವಾಗಬೇಕೆಂದು ಕಾಯುತ್ತಿದ್ದೆವು. ಈಗ ಖಚಿತವಾಗಿದೆ. ಆರೋಪಿಗಳನ್ನು ಬಂಧಿಸಿದ್ದೇವೆ. ಇದಕ್ಕಾಗಿ ಸರ್ಕಾರವನ್ನು ಪ್ರಶಂಸಿಸಬೇಕು. ನಾವು ಒಳ್ಳೆಯ ಕೆಲಸ ಮಾಡಿದ್ದೇವೆ. ಯಾವುದೇ ಮುಲಾಜಿಲ್ಲದೇ ಆರೋಪಿಗಳನ್ನು ಬಂಧಿಸಿದ್ದೇವೆ ಎಂದರು.
|
7 |
+
ಘಟನೆಯ ದಿನ ವಿಧಾನಸೌಧದ ಭದ್ರತೆಗೆ ನಿಯೋಜರಾಗಿದ್ದ ಪೊಲೀಸ್ ಅಧಿಕಾರಿಗಳಿಂದ ಲೋಪಗಳಾಗಿದ್ದರೆ ಅಂತವರ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆ. ಇದಕ್ಕೆ ನಮಗೆ ಯಾರ ಸಲಹೆಯೂ ಬೇಕಿಲ್ಲ ಎಂದು ಹೇಳಿದರು. ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇತರರು ಆರೋಪಿಗಳ ಕುರಿತು ಸಮರ್ಥಿಸಿಕೊಂಡ ಬಗ್ಗೆ ಪ���ರತಿಕ್ರಿಯಿಸಿದ ಪರಮೇಶ್ವರ್, ಆಯಾ ಇಲಾಖೆಯ ಸಚಿವರಿಗೆ ಮಾತ್ರ ಸ್ಪಷ್ಟ ಮಾಹಿತಿ ಇರುತ್ತದೆ. ಉಳಿದವರಿಗೆ ಹೆಚ್ಚಿನ ತಿಳುವಳಿಕೆ ಇರುವುದಿಲ್ಲ. ಆದರೆ ಸರ್ಕಾರವಾಗಿ ಸಂಪುಟದ ಸಚಿವರು ಹೇಳಿಕೆಗಳನ್ನು ನೀಡಿರುತ್ತಾರೆ. ಆದರೆ ಅವರ ಎಲ್ಲಾ ಮಾತುಗಳಿಗೂ ನಾನು ಸ್ಪಷ್ಟನೆ ನೀಡಲು ಸಾಧ್ಯವಿಲ್ಲ. ಸಂಬಂಧಪಟ್ಟವರೇ ಉತ್ತರ ನೀಡಬೇಕು ಎಂದರು.
|
8 |
+
ಸ್ಪೋಟ ಪ್ರಕರಣ; ಜಂಟಿ ತನಿಖೆ :ಬೆಂಗಳೂರಿನ ರಾಮೇಶ್ವರಂ ಕೆಫೆಸ್ಪೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದವರು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ರಾಜ್ಯದ ಸಿಸಿಬಿ ಪೊಲೀಸರು ಕೂಡ ತನಿಖೆಗೆ ಕೈ ಜೋಡಿಸಿದ್ದಾರೆ. ಯಾರೇ ತನಿಖೆ ಮಾಡಲಿ ಪ್ರಕರಣವನ್ನು ಬೇಸುವುದು ಮತ್ತು ಸ್ಪೋಟಕ್ಕೆ ಯಾರು ಕಾರಣ ಎಂಬುದನ್ನು ಪತ್ತೆ ಹಚ್ಚುವುದು ನಮಗೆ ಮುಖ್ಯ.
|
9 |
+
ಬೆಂಗಳೂರು ಸ್ಪೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ ಆಗಮಿಸಿದೆ. ನಮ್ಮ ಪೊಲೀಸರು ಪ್ರಕರಣವನ್ನು ಅವರಿಗೆ ಹಸ್ತಾಂತರಿಸಲಿದ್ದಾರೆ. ನಮಗಿರುವ ಮಾಹಿತಿಯನ್ನು ಎನ್ಐಎ ಜೊತೆ ಹಂಚಿಕೊಳ್ಳಲಾಗುವುದು. ಬಸ್ನಲ್ಲಿ ಸಂಚರಿಸಿದ ದೃಶ್ಯಾವಳಿಗಳನ್ನು ನೂರಾರು ಕಡೆ ಪರಿಶೀಲಿಸಿ ಸಂಗ್ರಹಿಸಲಾಗಿದೆ. ಕೆಲವು ಮಾಹಿತಿಗಳು ದೊರೆತಿವೆ. ತನಿಖೆ ದೃಷ್ಟಿಯಿಂದ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
|
10 |
+
ಜೈಲಿನಲ್ಲಿ ಕೆಲ ಚಟುವಟಿಕೆಗಳು ನಡೆಯುತ್ತಿರುವ ಮಾಹಿತಿ ಆಧರಿಸಿ ನಮ್ಮ ಪೊಲೀಸರು ದಾಳಿ ನಡೆಸಿ ಈ ಮೊದಲು ಪರಿಶೀಲಿಸಿದ್ದರು. ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ತಂಡಗಳನ್ನು ರಚಿಸಲಾಗಿತ್ತು. ರಾಜ್ಯದ ಭಯೋತ್ಪಾದಕ ನಿಗ್ರಹ ದಳವೂ ಕೂಡ ತನಿಖೆಯಲ್ಲಿ ಭಾಗಿಯಾಗಿದೆ ಎಂದು ತಿಳಿಸಿದರು. ಎನ್ಐಎ ತನಿಖಾ ಕಚೇರಿ ಬೆಂಗಳೂರಿನಲ್ಲಿ ಈಗಾಗಲೇ ಅಸ್ತಿತ್ವದಲ್ಲಿದೆ. ಮಂಗಳೂರಿನಲ್ಲಿ ಕಚೇರಿ ತೆರೆಯುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
|
11 |
+
ಮಂಡ್ಯ ಪ್ರಕರಣದಲ್ಲೂ ಕ್ರಮ :2022ರ ನವೆಂಬರ್ನಲ್ಲಿ ಬಿಜೆಪಿಯವರೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆಗ ಬಿಜೆಪಿ ಸರ್ಕಾರ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ. ಕಾನೂನು ಎಲ್ಲರಿಗೂ ಒಂದೇ. ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವುದು ಅಪರಾಧ. ಹೀಗಾಗಿ ಮಂಡ್ಯ ಜಿಲ್ಲಾ ಪೊಲೀಸರು ಪಾಕಿಸ್ತಾನದ ಪರ ಘೋಷಣೆ ಕೂಗಿದ ಬಿಜೆಪಿಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಆ ವೇಳೆ ಘಟನೆಯ ಬಗ್ಗೆ ನಮ್ಮ ಗಮನಕ್ಕೆ ಬಂದಿರಲಿಲ್ಲ. ಈಗ ಬಂದಿದೆ. ಹೀಗಾಗಿ ಕ್ರಮ ಕೈಗೊಂಡಿದ್ದೇವೆ ಎಂದರು.
|
eesanje/url_46_215_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಾಂಬ್ ಸ್ಫೋಟ ಪ್ರಕರಣ: ದುಷ್ಕರ್ಮಿಯ ರೇಖಾಚಿತ್ರ ತಯಾರಿಸಿ ಕಾರ್ಯಾಚರಣೆ
|
2 |
+
ಬೆಂಗಳೂರು, ಮಾ.4- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ಮಿಂಚಿನಂತೆ ಮರೆಯಾಗಿರುವ ದುಷ್ಕರ್ಮಿಯ ರೇಖಾಚಿತ್ರವನ್ನು ನಗರ ಪೊಲೀಸರು ತಯಾರಿಸಿದ್ದಾರೆ. ಕಳೆದ ಶುಕ್ರವಾರ ಮಧ್ಯಾಹ್ನ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಗೆ ಬಸ್ನಲ್ಲಿ ಬಂದು ತಿಂಡಿ ತಿಂದು ಕೈ ತೊಳೆಯುವ ಜಾಗದಲ್ಲಿ ತಾನು ತಂದಿದ್ದ ಕಪ್ಪು ಬಣ್ಣದ ಬ್ಯಾಗ್ನ್ನು ಇಟ್ಟು ಹೋಗಿರುವ ಪ್ರತಿಯೊಂದು ದೃಶ್ಯಾವಳಿಗಳು ಕೆಫೆಯಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
|
3 |
+
ಆರೋಪಿಯು ಸುಮಾರು 25ರಿಂದ 30 ವರ್ಷದವನಂತೆ ಕಾಣುತ್ತಿದ್ದು, ಶರ್ಟ್, ಪ್ಯಾಂಟ್ ಧರಿಸಿ ನಂ.10 ಸಂಖ್ಯೆ ಇರುವ ಟೋಪಿ ಹಾಕಿಕೊಂಡು, ಕೂಲಿಂಗ್ ಗ್ಲಾಸ್, ಕಲರ್ ಮಾಸ್ಕ್ ಧರಿಸಿರುವುದು ಸಿಸಿ ಟಿವಿಯ ದೃಶ್ಯಾವಳಿಯಲ್ಲಿ ಕಂಡುಬಂದಿದೆ. ಅಲ್ಲದೆ ಆತ ಬಸ್ ಇಳಿದು ಹೋಟೆಲ್ಗೆ ಅತಿವೇಗವಾಗಿ ಟೈಮ್ ನೋಡಿಕೊಂಡು ಬರುವ ದೃಶ್ಯ ಹಾಗೂ ಮರದ ಮರೆಯಲ್ಲಿ ನಿಂತು ಎಲ್ಲೆಲ್ಲಿ ಸಿಸಿಕ್ಯಾಮೆರಾಗಳಿವೆ, ಯಾವ ಗ್ರಾಹಕರು ಹೋಟೆಲ್ಗೆ ಬರುತ್ತಿದ್ದಾರೆ ಎಂಬುದನ್ನು ಸಹ ಆತ ಗಮನಿಸುತ್ತಿರವ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಎಲ್ಲಾ ದೃಶ್ಯಾವಳಿಗಳನ್ನು ಆಧರಿಸಿ ನಗರ ಪೊಲೀಸರು ದುಷ್ಕರ್ಮಿಯ ರೇಖಾಚಿತ್ರವನ್ನು ತಯಾರಿಸಿ ಆತನ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.
|
4 |
+
ಇನ್ನೂ ಪತ್ತೆಯಾಗದ ಆರೋಪಿರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿ ಇನ್ನೂ ಸಿಕ್ಕಿಲ್ಲ. ಘಟನೆ ನಡೆದು ನಾಲ್ಕು ದಿನಗಳಾದರೂ ನಿಖರವಾಗಿ ದುಷ್ಕರ್ಮಿ ಯಾರೆಂಬುದು ನಗರ ಪೊಲೀಸರಿಗೆ ತಿಳಿದುಬಂದಿಲ್ಲ.ಕಳೆದ ಶುಕ್ರವಾರದಿಂದ ಸಿಸಿಬಿ ಪೊಲೀಸರು ಸೇರಿದಂತೆ 8 ವಿಶೇಷ ತಂಡಗಳು ನಿರಂತರವಾಗಿ ಆರೋಪಿ ಪತ್ತೆ ಕಾರ್ಯದಲ್ಲಿ ತೊಡಗಿವೆಯಾದರೂ ಸಹ ಆತ ಸಿಕ್ಕಿಲ್ಲ. ಸಿಸಿಬಿ ಪೊಲೀಸರ ಒಂದು ತಂಡ ಆರೋಪಿ ಮೊಬೈಲ್ ಬಳಸಿರಬಹುದೆಂದು ಟವರ್ ಡಂಪ್ ಹಾಗೂ ಸಿಡಿಆರ್ನ್ನು ಅನಾಲಿಸಿಸ್ ಮಾಡುತ್ತಿದೆ.
|
5 |
+
ಮತ್ತೊಂದು ತಂಡ ರಾಮೇಶ್ವರಂ ಕೆಫೆಯಿಂದ ತಮಿಳುನಾಡು ಗಡಿವರೆಗೆ ಹಾಗೂ ಕೆಫೆಯಿಂದ ವೈಟ್ಫೀಲ್ಡ್ ಮಾರ್ಗದಲ್ಲಿ ಚನ್ನಸಂದ್ರ, ಸರ್ಜಾಪುರ ಮಾರ್ಗದ ಸಾವಿರಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸಿದರೂ ಸಹ ಆರೋಪಿ ಬಾಂಬ್ ಇಟ್ಟ ಬಳಿಕ ಯಾವ ಮಾರ್ಗದಲ್ಲಿ ಹೋಗಿದ್ದಾನೆ ಎಂಬ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.ಮತ್ತೊಂದೆಡೆ ಆರೋಪಿಯು ಬಾಂಬ್ ಇಡುವ ವೇಳೆ ಧರಿಸಿದ್ದ ಶರ್ಟ್ ಹಾಗೂ ಪ್ಯಾಂಟ್ ಬದಲಾಯಿಸಿ ಟೀ-ಶರ್ಟ್, ಜೀನ್ಸ್ಪ್ಯಾಂಟ್ ಧರಿಸಿ ಪರಾರಿಯಾಗಿದ್ದಾ ನೆಂಬ ಶಂಕೆಯು ವ್ಯಕ್ತವಾಗಿದೆ. ಅಲ್ಲದೆ, ಆರೋಪಿ ಎರಡು-ಮೂರು ಬಸ್ಗಳನ್ನು ಬದಲಾಯಿಸಿ ರಾಜ್ಯದ ಗಡಿ ಬಿಟ್ಟು ಹೊರರಾಜ್ಯಕ್ಕೆ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ.
|
6 |
+
ಹಾಗಾಗಿ ಮಹಾರಾಷ್ಟ್ರ ಹಾಗೂ ತೆಲಂಗಾಣ ಎಟಿಸಿ ಹಾಗೂ ಕೌಂಟರ್ ಇಂಟಿಲಿಜೆನ್ಸ್ ಸೆಲ್ಟಿನ್ ಸಂಪರ್ಕದಲ್ಲಿ ನಗರ ಪೊಲೀಸರು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ತನಿಖಾ ತಂಡಗಳು ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿಯ ಅಧಿಕಾರಿಗಳನ್ನು ಸಂಪರ್ಕಿಸಿ ಆರೋಪಿಗಾಗಿ ಶೋಧ ನಡೆಸುತ್ತಿವೆ.
|
7 |
+
ಆರೋಪಿಯು ರಾಮೇಶ್ವರ ಕೆಫೆಗೆ ಬಸ್ನಲ್ಲಿ ಬಂದಿದ್ದು, ರವೆ ಇಡ್ಲಿ ತಿಂದು ಕೈತೊಳೆಯುವ ಜಾಗದಲ್ಲಿ ಬಾಂಬ್ ಇಟ್ಟು ಬಂದ ದಾರಿಯಲ್ಲಿ ಹೋಗದೆ ಬೇರೆ ರಸ್ತೆಯ ಮುಖಾಂತರ ಪರಾರಿಯಾಗಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
|
eesanje/url_46_215_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಾಂಬ್ ಪ್ರಕರಣ ಅಗತ್ಯ ಬಿದ್ದರೆ ಎನ್ಐಎಗೆ : ಸಿಎಂ ಸಿದ್ದರಾಮಯ್ಯ
|
2 |
+
ಚಿಕ್ಕಮಗಳೂರು, ಮಾರ್ಚ್ 03: ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕ ಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಮೇಶ್ವರ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ ಎಂದರು.
|
3 |
+
ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಲ್ಲವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಘಟನೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು.
|
4 |
+
ಬಿಜೆಪಿ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತುಬ್ರಾಂಡ್ ಬೆಂಗಳೂರು ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ಬಿಜೆಪಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು. 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು ಎಂದು ಕೇಳಿದರು. ಇದು ಎನ್.ಐ.ಎ, ಅವರ ವೈಫಲ್ಯವಲ್ಲವೇ ಎಂದು ಪ್ರಶ್ನಿಸಿದರು. ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಬಿಜೆಪಿಯವರು ರಾಜಕೀಯ ಮಾಡಬಾರದು ಎಂದರು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಸ್ಫೋಟ ವಾಗಿತ್ತು.ಆಗ ಬಿಜೆಪಿ ಅಧಿಕಾರದಲ್ಲಿದ್ದರು ಎಂದರು.
|
5 |
+
ನಿಯಮಾವಳಿಗಳಂತೆ ಬರಪೀಡಿತ ತಾಲ್ಲೂಕುಗಳ ಘೋಷಣೆಚಿಕ್ಕಮಗಳೂರು ಜಿಲ್ಲೆಯನ್ನು ಬರ ಪೀಡಿತ ತಾಲ್ಲೂಕು ಗಳ ಪಟ್ಟಿಯಿಂದ ಹೊರಗಿಟ್ಟಿರುವ ಬಗ್ಗೆ ಮಾತನಾಡಿ ಬರಪೀಡಿತ ಎಂದು ಘೋಷಣೆ ಮಾಡಲು ಕೆಲವು ನಿಯಮಾವಳಿಗಳು ಇದ್ದು ಅದರಂತೆ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. 17 ತಾಲ್ಲೂಕು ಉಳಿದುಕೊಂಡಿವೆ ಎಂದರು.
|
6 |
+
ಮಂಗನ ಕಾಯಿಲೆ: ಆರೋಗ್ಯ ಸಚಿವರ ಬಳಿ ಚರ್ಚೆಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿ, ಆರೋಗ್ಯ ಸಚಿವರ ಬಳಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದರು.
|
7 |
+
ಲೋಕಸಭೆಗೆ ತಯಾರಿ ಇನ್ನಷ್ಟು ತೀವ್ರಗೊಳಿಸಲಾಗುವುದುಲೋಕಸಭೆಗೆ ತಯಾರಿ ನಡೆದಿದ್ದು,ಸಿದ್ಧತೆ ಇನ್ನಷ್ಟು ತೀವ್ರಗೊಳಿಸುವುದಾಗಿ ತಿಳಿಸಿದರು. ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಅಕ್ರಮ ಭೂ ಒತ್ತುವರಿಗೆ ಸಂಬಂಧಿಸಿದಂತೆ 25 ತಹಶೀಲ್ದಾರ ನೇಮಕಾತಿಯಾಗಿದ್ದು ವರದಿ ನೀಡಿದ್ದಾರೆ ಈ ಬಗ್ಗೆ ಪರಿಶೀಲನಾ ಹಂತದಲ್ಲಿದ್ದು, ಕಂದಾಯ ಸಚಿವರ ಬಳಿ ಮಾತನಾಡುವುದಾಗಿ ಹೇಳಿದರು. ಆರ್.ಅಶೋಕ್ ಅವರು ಏನಾದರೂ ಮಾಡಿ ಕಾಂಗ್ರೆಸ್ ಗೆ ಮತ ಹಾಕಿ ಎಂದು ಹೇಳಿರುವ ���ಗ್ಗೆ ಪ್ರತಿಕ್ರಿಯೆ ನೀಡಿ ಮತ ನೀಡಿ ಎಂದು ಕೇಳಿರಬಹುದು, ಏನಾದರೂ ಮಾಡಿ ಎಂದು ಕೇಳುತ್ತಾರೆಯೇ ಎಂದು ಪ್ರಶ್ನಿಸಿದರು.
|
eesanje/url_46_215_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ- ನೆಮ್ಮದಿ : ಆರ್.ಅಶೋಕ್
|
2 |
+
ಬೆಂಗಳೂರು, ಮಾ.3- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಅಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ- ನೆಮ್ಮದಿಯ ಭರವಸೆ ಲಭಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು.
|
3 |
+
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಬಾಂಬ್ ಬ್ಲಾಸ್ಟ್ ಆಗಬೇಕು? ಈ ಸರ್ಕಾರ ಯಾಕೆ ಕಣ್ಮುಚ್ಚಿ ಕುಳಿತಿದೆ? ಯಾರನ್ನು ಓಲೈಸುತ್ತಿದೆ? ಎಫ್ಎಸ್ಎಲ್ ವರದಿ ಬಿಡುಗಡೆ ಮಾಡದೆ ಇರಲು ಸರ್ಕಾರದ ಮೇಲೆ ಸೋನಿಯಾ ಗಾಂಧಿ- ರಾಹುಲ್ ಗಾಂಧಿಯವರ ಒತ್ತಡ ಇದೆಯೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.
|
4 |
+
ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮನಸ್ಸನ್ನು ಪೂರ್ತಿ ಕಲ್ಮಶ ಮಾಡುವ ಕಡೆಗೆ ಹೋಗುತ್ತಿದೆ. ಕೆಂಗಲ್ ಹನುಮಂತಯ್ಯನವರು ಕಟ್ಟಿಸಿದ ವಿಧಾನಸೌಧ ರಾಜ್ಯದ ಹೃದಯವಿದ್ದಂತೆ. ಅಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಅಕ್ಷಮ್ಯ ಎಂದು ತಿಳಿಸಿದರು.ಅಲ್ಪಸಂಖ್ಯಾತರು ತಮಗೆ ಮತ ಹಾಕಿದರೆ ಸಾಕು, ಬಹುಸಂಖ್ಯಾತರನ್ನು ಬಗ್ಗು ಬಡಿಯುತ್ತೇವೆ ಎಂಬ ನೀತಿ ಕಾಂಗ್ರೆಸ್ ಪಕ್ಷದ್ದು ಎಂದು ಅವರು ತಿಳಿಸಿದರು.
|
5 |
+
ನೀವೇನಾದರೂ ಮಾಡಿ; ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಭೆ ಮಾಡಿ. ಮೈಸೂರಿನಲ್ಲಿ ಅವರ ಶಾಸಕರ ಹತ್ಯೆ ಪ್ರಯತ್ನ ಮಾಡಿದರೂ ಏನೂ ಮಾಡುವುದಿಲ್ಲ ಎಂಬ ಕರ್ನಾಟಕದ ಕಾಂಗ್ರೆಸ್ ಮನಸ್ಥಿತಿ ಗಂಡಾಂತರ ತರುವಂತಿದೆ ಎಂದು ಆಕ್ಷೇಪ ಸೂಚಿಸಿದರು. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕರೆಂಬ ಇಲಿಗಳು ಬಿಲಕ್ಕೆ ಬಂದು ಹುಲಿಗಳಾಗಿವೆ. ನಮ್ಮನ್ನೇನೂ ಮಾಡುವುದಿಲ್ಲ ಎಂಬ ಮನಸ್ಥಿತಿ ಭಯೋತ್ಪಾದಕರದ್ದಾಗಿದೆ. ಇದು ದೊಡ್ಡ ಆಘಾತ ತಂದಿದೆ. ಸರ್ಕಾರವು ಅವರ ಬಗ್ಗೆ ಸಹಾನುಭೂತಿ ತೋರುವುದು ಆಘಾತಕಾರಿ ವಿಚಾರ ಎಂದು ತಿಳಿಸಿದರು.
|
6 |
+
ರಾಜ್ಯ ಸರ್ಕಾರವು ಕೋಮುವಾದದ ಕಡೆ ವಾಲುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆಯ ಪ್ರವೃತ್ತಿ ಮುಂದುವರೆದಿದೆ. ಅಲ್ಪಸಂಖ್ಯಾತರ ಬಗ್ಗೆ ಬರುವ ವಿಷಯಗಳನ್ನು ಕಾಂಗ್ರೆಸ್ಸಿಗರು ನಿರಂತರವಾಗಿ ಮುಚ್ಚಿಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಬಾಂಬ್ ಸ್ಪೋಟದ ಆರೋಪಿಗಳನ್ನು ಅಮಾಯಕರು, ಮೈ ಬ್ರದರ್ಸ್ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದು ಟೀಕಿಸಿದರು.
|
7 |
+
ವಿಧಾನಸೌಧದಲ್ಲಿ ಕೆಲದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ಆ ರೀತಿ ಹೇಳಿಲ್ಲ; ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.ಫಾರೆನ್ಸಿಕ್ ವರದಿಯಲ್ಲಿ ಹಾಗೆ ಆಗಿಲ್ಲ ಎಂದು ಬರಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳ��ದ್ದಾರೆ. ಮಾಧ್ಯಮಗಳು ಘೋಷಣೆ ಕೂಗಿದ್ದು ನಿಜ ಎಂದು ಪ್ರಕಟಿಸಿದರೂ ಕಾಂಗ್ರೆಸ್ವರು ಅದನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
|
8 |
+
ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಆಗಿದೆ. ಆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೋಗಿ, ಇದು ಬಿಸಿನೆಸ್ ರೈವಲ್ರಿ; ತಿಂಡಿ ವಿಚಾರದಲ್ಲಿ ಒಳಜಗಳ ಎಂದಿದ್ದರು. ಈಗ ಅದು ಭಯೋತ್ಪಾದಕರ ಕೃತ್ಯ ಎಂದು ಗೊತ್ತಾಗಿದೆ. ಆದರೂ ಅದನ್ನು ಮುಚ್ಚಿಡುತ್ತಿದ್ದಾರೆ ಎಂದು ಟೀಕಿಸಿದರು.
|
eesanje/url_46_215_12.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ರೂಪಿಸಿದ್ದ ರಾಮೇಶ್ವರಂ ಕಫೆ ಬಾಂಬರ್
|
2 |
+
1ಬೆಂಗಳೂರು,ಮಾ.3- ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಪೊಲೀಸರನ್ನು ಯಾಮಾರಿಸಲು ಮಾಸ್ಟರ್ ಪ್ಲಾನ್ ಹಾಕಿದ್ದ ಎನ್ನುವುದು ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ. ಬಾಂಬ್ ಇಡಲು ಹೋಗಿದ್ದಾಗ ಶರ್ಟ್ ಮೇಲೆ ಶರ್ಟ್ ಹಾಕಿಕೊಂಡು ನಂತರ ಎಸ್ಕೇಪ್ ಆಗುವ ವೇಳೆ ಬಟ್ಟೆ ಬದಲಿಸಲು ಪ್ಲಾನ್ ರೂಪಿಸಿದ್ದನಂತೆ. ಇದರ ಜೊತೆಗೆ ಹಲವಾರು ಬಸ್ ಚೇಂಜ್ ಮಾಡಿ ಟ್ರಾವೆಲಿಂಗ್ ಮಾಡಿದ್ದ ಎಂಬ ಅಂಶವೂ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
|
3 |
+
ಟಿಕೆಟ್ ಪಡೆಯದೇ ಬಸ್ನಲ್ಲಿ ಪ್ರಯಾಣ ಮಾಡಿರುವ ಆರೋಪಿ ಒಂದು ಬಸ್ ಹತ್ತಿ ಮುಂದಿನ ಸ್ಟಾಪ್ನಲ್ಲಿ ಇಳಿದು ಮತ್ತೊಂದು ಬಸ್ ಹತ್ತಿ ನಂತರವೂ ಮುಂದಿನ ಸ್ಟಾಪ್ನಲ್ಲಿ ಇಳಿದಿದ್ದಾನೆ ಇದೇ ರೀತಿ 15ಕ್ಕೂ ಹೆಚ್ಚ ಬಸ್ಗಳಲ್ಲಿ ಆತ ಟಿಕೆಟ್ ಪಡೆಯದೆ ಸಂಚರಿಸಿದ್ದಾನೆ ಎಂದು ತಿಳಿದುಬಂದಿದೆ. ಬಟ್ಟೆ ಬದಲಿಸುವುದರ ಜೊತೆಗೆ ಹಲವಾರು ಬಸ್ಗಳಲ್ಲಿ ಪ್ರಯಾಣ ಮಾಡಿರುವ ಶಂಕಿತ ಹೊರ ರಾಜ್ಯಕ್ಕೆ ಎಸ್ಕೆಪ್ ಆಗಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
|
4 |
+
ಬಾಂಬ್ ಸ್ಪೋಟ ಮತ್ತು ಉಗ್ರ ಕೃತ್ಯಗಳ ತನಿಖೆಯಲ್ಲಿ ಖ್ಯಾತಿ ಗಳಿಸಿರುವ ಮಹಾರಾಷ್ಟ್ರ ಹಾಗೂ ತೆಲಂಗಾಣ ಎಟಿಸಿ ಹಾಗೂ ಕೌಂಟರ್ ಇಂಲಿಜೆನ್ಸ್ ಸೆಲ್ ಟೀಂ ಸಂಪರ್ಕದಲ್ಲಿ ಬೆಂಗಳೂರು ಪೊಲೀಸರು ನಿರಂತರ ಸಂಪರ್ಕದಲ್ಲಿದ್ದಾರೆ. ತೆಲಂಗಾಣ ಸೆಲ್ ತಂಡದವರು ಈಗಾಗಲೇ ಘಟನಾ ಸ್ಥಳದ ಸ್ಯಾಂಪಲ್ಸ ಪಡೆದು ಹೋಗಿರುವುದು ಗೊತ್ತಾಗಿದೆ.ತಮಿಳುನಾಡು, ಕೇರಳ ಹಾಗೂ ತೆಲಂಗಾಣದಲ್ಲಿ ಬೀಡುಬಿಟ್ಟಿರೋ ಬೆಂಗಳೂರು ಪೊಲೀಸರು ಆರೋಪಿಯ ಬಂಧನಕ್ಕಾಗಿ ಜಾಲ ಬೀಸಿದ್ದಾರೆ.ಪಲಾಯನ ಮಾಡಿರುವ ಆರೋಪಿ ಬಂಧನಕ್ಕಾಗಿ ಸಿಸಿಬಿ ಸೇರಿದಂತೆ ಇನ್ನೂರಕ್ಕೂ ಹೆಚ್ಚು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
|
5 |
+
ಒಂಟಿ ತೋಳ ಭಯೋತ್ಪಾದಕ:ಒಬ್ಬನೇ ವ್ಯಕ್ತಿ ಬಾಂಬ್ ತಯಾರಿಸಿ ಸ್ಪೋಟಿಸುವ ಸಂಪೂರ್ಣ ಜವಾಬ್ದಾರಿ ಹೊಂದಿದ್ದರೆ ಅವನನ್ನು ಒಂಟಿ ತೋಳ ಭಯೋತ್ಪಾದಕ ಎಂದು ಕರೆಯಲಾಗುತ್ತದೆ. ಅಮೇರಿಕಾದಲ್ಲಿ ಈ ರೀತಿಯ ಭಯೋತ್ಪಾದನೆಗೆ ಇಂತಹ ಹೆಸರು ನೀಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನು ಒಂಟಿ ತೋಳ ಭಯೋತ್ಪಾದಕ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
|
6 |
+
ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಬಾಂಬರ್ ಫ್ಲಾನ್ ಹೇಗಿತ್ತು ಗೊತ್ತಾ..?ಬ್ಲಾಸ್ಟ್ ಆರೋಪಿ ಬಾಂಬ್ ಇಟ್ಟ ಒಂದೂವರೆ ಗಂಟೆ ಬಳಿಕ ಬಾಂಬ್ ಸ್ಪೋಟ ಆಗುವಂತೆ ಟೈಮ್ ಫಿಕ್ಸ್ ಮಾಡಿದ್ದು ಆತ ಬೆಂಗಳೂರಿನಿಂದ ತಮಿಳುನಾಡಿಗೆ ಪರಾರಿಯಾಗುವ ಉದ್ದೇಶದಿಂದ ಎನ್ನುವುದು ಪೊಲೀಸರಿಗೆ ಗೊತ್ತಾಗಿದೆ. ರಾಮೇಶ್ವರಂ ಕೆಫೆಯಿಂದ ಹೊಸೂರು ಬಾರ್ಡರ್ ಗೆ ಹೋಗೋಕೆ 59 ನಿಮಿಷಗಳು ಬೇಕು ಒಂದು ವೇಳೆ ಟ್ರಾಫಿಕ್ ಇದ್ರೂ 1 ಗಂಟೆ 15 ನಿಮಿಷದಲ್ಲಿ ರೀಚ್ ಆಗಬಹು��ು ಎಂಬ ಉದ್ದೇಶದಿಂದ ಒಂದೂವರೆ ಗಂಟೆಯಲ್ಲಿ ಬೆಂಗಳೂರು ಬಿಟ್ಟು ಹೊರಹೋಗಲು ಫ್ಲಾನ್ ಮಾಡಿರೋ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸರು ರಾಮೇಶ್ವರಂ ಕೆಫೆ ಯಿಂದ ತಮಿಳುನಾಡು ಬಾರ್ಡರ್ ವರೆಗಿನ ಎಲ್ಲಾ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸುತ್ತಿದ್ದಾರೆ.ಆರೋಪಿ ರಾಮೇಶ್ವರಂ ಕೆಫೆಯಿಂದ ವೈಟ್ ಫೀಲ್ಡ ಗೆ ಹೋಗಿರೋ ಬಗ್ಗೆ ಮಾಹಿತಿ ಇದೆ ನಂತರ ಅಲ್ಲಿಂದ ಚೆನ್ನಸಂದ್ರ ಮೂಲಕ ಸರ್ಜಾಪುರ, ಅತ್ತಿಬೆಲೆ ಮೂಲಕ ಎಸ್ಕೇಪ್ ಆಗಿರೋ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
|
7 |
+
ಬಾಂಬ್ ಇಟ್ಟವನನ್ನು ನೋಡಿದ್ದೇನೆ:ರಾಮೇಶ್ವರಂ ಕೆಫೆ ಮ್ಯಾನೇಜರ್ ಹರಿಹರನ್ ಎಂಬುವರು ಬಾಂಬ್ ಇಟ್ಟು ಪರಾರಿಯಾಗಿರುವ ಆರೋಪಿಯನ್ನು ನೋಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಸಾಮಾನ್ಯ ವ್ಯಕ್ತಿಯಂತೆ ಬಂದಿದ್ದ ಬಾಂಬರ್ ಇಡ್ಲಿ ತೆಗೆದುಕೊಂಡು ಒಂದು ಕಡೆ ಕೂತಿದ್ದ ನಾನು ಅವನನ್ನು ನೋಡ್ದೆ, ಕೆಲ ಹೊತ್ತಿನಲ್ಲೇ ಆತ ನಾಪತ್ತೆಯಾಗಿದ್ದ ಆತ ಕೂತಿದ್ದ ಜಾಗದಲ್ಲಿ ಒಂದು ಸಣ್ಣ ಟಿಫಿನ್ ಬಾಕ್ಸ್ ಇತ್ತು ಎಂದು ಅವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಆ ಬಾಕ್ಸ್ ಗಾಯಾಳು ಸ್ವರ್ಣಾಂಭ ಅವರದ್ದು ಅಂತಾ ಅಂದುಕೊಂಡಿದ್ದೇ ಆದರೆ ಸ್ಪೋಟಗೊಂಡಿದ್ದು ಅದೇ ಟಿಫಿನ್ ಬಾಕ್ಸ್ ಎಂದು ಅವರು ಹೇಳಿದ್ದಾರೆ.
|
8 |
+
ಸ್ವರ್ಣಾಂಭ ಚಿಕಿತ್ಸೆ ಮುಂದುವರಿಕೆ:ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದಲ್ಲಿ ತೀವ್ರವಾಗಿ ಗಾಯಗೊಂಡಿರುವ ಗಾಯಾಳು ಸ್ವರ್ಣಾಂಭಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದ ಕೆಲವರು ನಿನ್ನೆ ಡಿಸ್ಚಾರ್ಜ್ ಆಗಿದ್ದಾರೆ.
|
eesanje/url_46_215_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಡಾ.ಮಂಜುನಾಥ್ ವ್ಯಕ್ತಿತ್ವಕ್ಕೆ ಕಳಂಕ ಬರುವ ತೀರ್ಮಾನ ಮಾಡುವುದಿಲ್ಲ: ಎಚ್.ಡಿ. ದೇವೇಗೌಡರು
|
2 |
+
ಬೆಂಗಳೂರು,ಮಾ.4- ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರು ರಾಷ್ಟ್ರ ರಾಜಕಾರಣಕ್ಕೆ ಬರಬೇಕೆಂಬ ಪ್ರೀತಿ ವಿಶ್ವಾಸದ ಒತ್ತಾಯವಿದೆ. ಆದರೆ ಅದಕ್ಕೆ ಅವರು ಸಮ್ಮತಿ ಕೊಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯರಾಗಿ, ನಿರ್ದೇಶಕರಾಗಿ ಸಲ್ಲಿಸಿದ ಸೇವೆಯಿಂದಾಗಿ ಅವರಿಗೆ ರಾಷ್ಟ್ರದಲ್ಲೇ ಉನ್ನತ ಮಟ್ಟದ ಗೌರವ ಸ್ಥಾನವಿದೆ. ಆ ವ್ಯಕ್ತಿತ್ವಕ್ಕೆ ಕಳಂಕ ಬರುವ ಯಾವ ತೀರ್ಮಾನವನ್ನು ನಾನು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
|
3 |
+
ಇವತ್ತಿನ ರಾಜಕೀಯ ವ್ಯವಸ್ಥೆ ಎಷ್ಟು ಕೆಟ್ಟು ಹೋಗಿದೆ ಎಂಬುದು ನಮಗೆ ಗೊತ್ತಿದೆ. ನಾಡಿನ ಜನರು ಪ್ರೀತಿ ವಿಶ್ವಾಸದಿಂದ ಅವರು ರಾಜಕೀಯಕ್ಕೆ ಬರಬೇಕೆಂದು ಬಯಸುತ್ತಿದ್ದಾರೆ. ಇವರಿಗೂ ಮಂಜುನಾಥ್ರವರ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶವಿಲ್ಲ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಗೌಡರು, ಪ್ರಧಾನಿ ನರೇಂದ್ರಮೋದಿ, ಕೇಂದ್ರ ಸಚಿವ ಅಮಿತ್ ಷಾ ಎಚ್.ಡಿ.ಕುಮಾರಸ್ವಾಮಿ ಅವರುಗಳು ಚರ್ಚೆ ಮಾಡಿದ ನಂತರ ತೀರ್ಮಾನವಾಗಲಿದೆ. ನಮಗೆ ಎಷ್ಟು ಕ್ಷೇತ್ರ ಕೊಡುತ್ತಾರೆ, ಯಾವ ಯಾವ ಕ್ಷೇತ್ರ ಕೊಡುತ್ತಾರೆ ಎಂಬುದು ಇನ್ನೊಂದು ವಾರದಲ್ಲಿ ಗೊತ್ತಾಗಲಿದೆ ಎಂದರು.
|
4 |
+
ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಸರ್ಕಾರ ತನ್ನ ಕರ್ತವ್ಯ ನಿರ್ವಹಿಸುವುದರಲ್ಲಿ ಹಿಂದೆ ಬಿದ್ದಿದೆ ಎಂದು ಹೇಳುವುದಿಲ್ಲ. ಆ ಘಟನೆ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು ನೀಡಿರುವ ಹೇಳಿಕೆಯನ್ನು ಗಮನಸಿದ್ದೇನೆ. ಅಗತ್ಯಬಿದ್ದರೆ ಘಟನೆಯನ್ನು ಎನ್ಐಎಗೆ ವಹಿಸುವುದಾಗಿ ಮುಖ್ಯಮಂತಿ ಹೇಳಿದ್ದಾರೆ. ಹೀಗಾಗಿ ಆ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಆದಷ್ಟು ಶೀಘ್ರ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಶಿಕ್ಷೆಗೊಳಪಡಿಸಬೇಕು ಎಂದು ಅವರು ತಿಳಿಸಿದರು.
|
5 |
+
ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇದೇ ವೇಳೆ ಗೌಡರು ತಿಳಿಸಿದರು.
|
eesanje/url_46_215_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಸಿಲಿಕಾನ್ ಸಿಟಿಯಲ್ಲಿ ಕನ್ನಡದ ಕೊಲೆ
|
2 |
+
ಬೆಂಗಳೂರು, ಮಾ.4- ಸಿಲಿಕಾನ್ ಸಿಟಿಯಲ್ಲಿ ಕನ್ನಡದ ಕೊಲೆಯಾಗಿದೆ. ಹೌದು ನಗರದ ಕೆಲವು ಪ್ರದೇಶಗಳ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡದ ಅಕ್ಷರಗಳನ್ನು ತಪ್ಪು ತಪ್ಪಾಗಿ ಬರೆಯುವ ಮೂಲಕ ಕೆಲವರು ಕಸ್ತೂರಿ ಕನ್ನಡದ ಕೊಲೆ ಮಾಡಿದ್ದಾರೆ. ಅದರಲ್ಲೂ ಅನ್ಯಭಾಷಿಕರೇ ಹೆಚ್ಚಾಗಿ ವಾಸಿಸುವ ಎಂಜಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಏರ್ಪೋರ್ಟ್ ರೋಡ್, ರೆಸಿಡೆನ್ಸಿ ಮತ್ತಿತರ ಪ್ರದೇಶಗಳಲ್ಲಿ ಈ ರೀತಿಯ ಅನ್ಯಾಯವಾಗಿದೆ.
|
3 |
+
ನಗರದಲ್ಲಿರುವ ಎಲ್ಲಾ ಮಳಿಗೆ, ಕಚೇರಿ ಹಾಗೂ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಶೇ.60 ರಷ್ಟು ಪ್ರಾಧನ್ಯತೆ ನೀಡಬೇಕು ಎಂಬ ಭರದಲ್ಲಿ ಕೆಲವರು ಈ ಎಡವಟ್ಟು ಮಾಡಿಕೊಂಡಿದ್ದಾರೆ. ಕನ್ನಡ ನಾಮಫಲಕ ಕಡ್ಡಾಯ ಜಾರಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲೇ ಕೆಲ ಸಂಸ್ಥೆಯವರು ಇಂಗ್ಲೀಷ್ ಪದಗಳನ್ನು ಗೂಗಲ್ ಅನುವಾದ ಮಾಡಿಕೊಂಡು ಅದೇ ರೀತಿಯ ಕನ್ನಡ ಪದಗಳನ್ನು ನಾಮಫಲಕಗಳಲ್ಲಿ ಹಾಕಿಕೊಂಡಿರುವುದು ಇದೀಗ ಎಲ್ಲೆಡೆ ರಾರಾಜಿಸುತ್ತಿದೆ.
|
4 |
+
ಇಂತಹ ಪದಗಳನ್ನು ನಾಮಫಲಕಗಳಲ್ಲಿ ಬಳಕೆ ಮಾಡಿ ಕನ್ನಡವನ್ನು ಕೊಲೆ ಮಾಡುವ ಮೊದಲು ತಮ್ಮ ತಪ್ಪನ್ನು ಸರಿಪಡಿಸಿಕೊಂಡು ಅಚ್ಚಕನ್ನಡದ ಕಸ್ತೂರಿ ಪದಗಳನ್ನು ಬಳಕೆ ಮಾಡಿಕೊಳ್ಳುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ.
|
eesanje/url_46_215_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಇಂದು ಬೆಳಗಾವಿಗೆ ಜೆ.ಪಿ.ನಡ್ಡಾ ಭೇಟಿ : ಲೋಕಸಭಾ ಅಭ್ಯರ್ಥಿಗಳ ಕುರಿತು ಚರ್ಚೆ
|
2 |
+
ಬೆಂಗಳೂರು,ಮಾ.4-ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಆಗಮಿಸುತ್ತಿದ್ದು, ನಾಲ್ಕು ಜಿಲ್ಲೆಗಳ ಪ್ರಮುಖರ ಜೊತೆ ಚರ್ಚೆ ನಡೆಸಲಿದ್ದಾರೆ.ಬೆಳಗಾವಿಯ ವೆಲ್ಕಮ್ ಐಟಿಸಿ ಹೋಟೆಲ್ನಲ್ಲಿ ರಾತ್ರಿ 9ಕ್ಕೆ ನಡೆಯಲಿರುವ ಈ ಸಭೆಗೆ ಬೆಳಗಾವಿ, ಚಿಕ್ಕೋಡಿ, ವಿಜಯಪುರ ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖರ ಸಭೆ ನಡೆಸಲಾಗುತ್ತದೆ.
|
3 |
+
ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೋರ್ ಕಮಿಟಿ ಸದಸ್ಯರು, ನಾಲ್ಕು ಜಿಲ್ಲೆಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಜೊತೆಗೆ ಹಾಲಿ ಶಾಸಕರು, ಸಂಸದರು, ಮಾಜಿ ಶಾಸಕರು, ಪಕ್ಷದ ಮುಖಂಡರು, ಟಿಕೆಟ್ ಆಕಾಂಕ್ಷಿಗಳನ್ನು ಸಹ ಸಭೆಗೆ ಆಹ್ವಾನಿಸಲಾಗಿದೆ.
|
4 |
+
ನಾಲ್ಕು ಜಿಲ್ಲೆಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಅಭಿಪ್ರಾಯವನ್ನು ಪಡೆಯಲಿರುವ ನಡ್ಡಾ ನಂತರ ಪಕ್ಷದ ಚುನಾವಣಾ ಸಮಿತಿಗೆ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸ್ಸು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.ಬೆಳಗಾವಿ, ಚಿಕ್ಕೋಡಿ, ವಿಜಾಪುರ ಹಾಗೂ ಬಾಗಲಕೋಟೆ ಕ್ಷೇತ್ರಗಳಿಗೆ ಆಕಾಂಕ್ಷಿಗಳು ಹೆಚ್ಚಾಗಿರುವುದರಿಂದ ಸರ್ವಸಮ್ಮತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಈ ಸಭೆಯನ್ನು ನಡೆಸಲಾಗುತ್ತದೆ.
|
5 |
+
ನಾಳೆ ಬೆಳಗ್ಗೆ 11 ಗಂಟೆಗೆ ಚಿಕ್ಕೋಡಿಯಲ್ಲಿ ಬಿಜೆಪಿ ಬೂತ್ ಮೇಲ್ಪಟ್ಟ ಕಾರ್ಯಕರ್ತರ ಸಭೆ ನಡೆಯಲಿದೆ. ಸಂಜೆ 4.30ಕ್ಕೆ ಬೆಳಗಾವಿಯಲ್ಲಿ ಆಯೋಜಿಸಲಾಗಿರುವ ಪ್ರಬುದ್ಧರ ಸಭೆಯಲ್ಲಿ ವೈದ್ಯರು, ಉದ್ಯಮಿಗಳು, ವಕೀಲರು, ಇಂಜಿನಿಯರ್, ಶಿಕ್ಷಣ ತಜ್ಞರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾವಿರಾರು ಜನರು ಭಾಗವಹಿಸಲಿದ್ದಾರೆ. ವಿಶೇಷವಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ಲೋಕಸಭಾ ಚುನಾವಣೆಯ ತಯಾರಿ, ಮತ್ತೆ ಸಂಘಟನೆಯ ದೃಷ್ಟಿಕೋನದಿಂದ ಈ ಸಭೆ ನಡೆಯಲಿದೆ.
|
6 |
+
ಈ ವೇಳೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಕೆಲಸಗಳನ್ನು ವಿಸ್ತೃತವಾಗಿ ತಿಳಿಸಲಾಗುತ್ತದೆ. ಅಲ್ಲದೇ ಭವಿಷ್ಯದಲ್ಲಿ ಪ್ರಥಮ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಸಭೆಯಲ್ಲಿ ಜೆ.ಪಿ.ನಡ್ಡಾ ಮಾತನಾಡಲಿದ್ದಾರೆ.
|
eesanje/url_46_215_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪ್ರಭಾಕರ್ ಚಿಣಿಗೆ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಲು ಒತ್ತಾಯ
|
2 |
+
ಬೆಂಗಳೂರು,ಮಾ.4- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಣ್ಣ ನೀರಾವರಿ ಇಲಾಖೆ ನಿವೃತ್ತ ಕಾರ್ಯದರ್ಶಿ ಪ್ರಭಾಕರ್ ಚಿಣಿ ಅವರಿಗೆ ಕೊಪ್ಪಳ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಬೇಕೆಂದು ಜಿಲ್ಲಾ ಘಟಕ ಮನವಿ ಮಾಡಿದೆ. ಈ ಸಂಬಂಧ ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ನೇತೃತ್ವದ ಕೊಪ್ಪಳ ಜಿಲ್ಲಾ ಬಿಜೆಪಿ ನಿಯೋಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದೆ.
|
3 |
+
ಜೊತೆಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿರುವ ನಿಯೋಗವು ಅವರಿಗೆ ಟಿಕೆಟ್ ನೀಡಿದರೆ ಕಾರ್ಯಕರ್ತರು ಗೆಲ್ಲಿಸಿಕೊಡಲಿದ್ದಾರೆ ಎಂಬ ಆಶ್ವಾಸನೆ ನೀಡಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿರುವ ಪ್ರಭಾಕರ್ ಚಿಣಿ ಅವರು ಜಿಲ್ಲೆಯಲ್ಲಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಕಳೆದ 10 ವರ್ಷಗಳ ಅವಧಿಯಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಎಂದು ನಿಯೋಗವು ಮನವರಿಕೆ ಮಾಡಿಕೊಟ್ಟಿದೆ.
|
4 |
+
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಆದರೂ ಧೃತಿಗೆಡದೆ ಲೋಕಸಭೆ ಚುನಾವಣೆಗೆ ಜಿಲ್ಲೆಯಾದ್ಯಂತ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುತ್ತಿದ್ದಾರೆ. ಪ್ರಭಾಕರ್ ಚಿಣಿಗೆ ಟಿಕೆಟ್ ಸಿಕ್ಕರೆ ಜಿಲ್ಲೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದೆ. ಹಾಲಿ ಲೋಕಸಭಾ ಸದಸ್ಯರಾದ ಕರಡಿ ಸಂಗಣ್ಣ ಅವರಿಗೆ ನಾವು ವಿರೋಧವಿಲ್ಲ. ಆದರೆ ಹಿಂದುಳಿದ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ಪ್ರಭಾಕರ್ ಚಿಣಿಗೆ ಟಿಕೆಟ್ ಸಿಗಬೇಕು, ರಾಜಕೀಯ ಕ್ಷೇತ್ರಕ್ಕೆ ಉತ್ತಮ ಚಾರಿತ್ರ ಹಿನ್ನಲೆವುಳ್ಳವರು ಬರಬೇಕೆಂಬ ಪ್ರಧಾನಿ ನರೇಂದ್ರಮೋದಿ ಆಶಯಕ್ಕೆ ಇದು ಸಕಾರಾತ್ಮಕವಾಗುತ್ತದೆ ಎಂದು ನಿಯೋಗವು ಹೇಳಿದೆ.
|
5 |
+
ಕೇಂದ್ರ ಚುನಾವಣಾ ಸಮಿತಿಗೆ ರಾಜ್ಯ ಕೋರ್ ಕಮಿಟಿ ಶಿಫಾರಸ್ಸು ಮಾಡುವ ವೇಳೆ ಪ್ರಭಾಕರ್ ಚಿಣಿಗೆ ಸಕಾರಾತ್ಮಕವಾಗಿ ಪರಿಣಮಿಸುವುದಾಗಿ ರಾಜ್ಯ ವರಿಷ್ಠರು ನಿಯೋಗಕ್ಕೆ ಆಶ್ವಾಸನೆ ನೀಡದ್ದಾರೆ ಎಂದು ಗೊತ್ತಾಗಿದೆ.
|
eesanje/url_46_215_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವರದಿ ಮುಚ್ಚಿಡುವ ಪ್ರಯತ್ನ ಮಾಡಲ್ಲ : ಗೃಹ ಸಚಿವ ಪರಮೇಶ್ವರ
|
2 |
+
ಬೆಂಗಳೂರು, ಮಾ.4- ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಬಗ್ಗೆ ಎಫ್ಎಸ್ಎಲ್ನಿಂದ ಸಂಪೂರ್ಣ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಈ ವರದಿಯನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಪದೇ ಪದೇ ವರದಿ ಮುಚ್ಚಿಡುತ್ತಿದ್ದಾರೆ ಎಂಬ ಆರೋಪ ಸರಿಯಲ್ಲ. ಖಾಸಗಿ ವರದಿ ಪರಿಗಣಿಸುವುದಿಲ್ಲ ಎಂದು ತಿಳಿಸಿದರು.
|
3 |
+
ಎಫ್ಎಸ್ಎಲ್ನಿಂದ ಸಂಪೂರ್ಣ ವರದಿ ಬಂದ ನಂತರ ಬಹಿರಂಗ ಪಡಿಸಲಾಗುವುದು. ಆ ಬಗ್ಗೆ ಅನುಮಾನ ಬೇಡ ಎಂದ ಅವರು, ವಿಡಿಯೋ ಪರಿಶೀಲಿಸಲು ಖಾಸಗಿ ಲ್ಯಾಬೊರೋಟರಿ ಇದೆಯೇ? ಖಾಸಗಿಯಾಗಿ ವಿಡಿಯೋ ಪರಿಶೀಲಿಸಲು ಯಾವ ಅನುಮತಿ ಇತ್ತು? ಖಾಸಗಿಯಾಗಿ ಪರಿಶೀಲನೆಗೆ ಒಳಪಡಿಸಬಹುದೇ? ಯಾರು ಎನ್ಓಸಿ ಕೊಟ್ಟಿದ್ದರು? ಆರೋಪಿತ ವಿಡಿಯೋಗೆ ಸಂಬಂಧಿಸಿದ ವಿಚಾರ ಬಹಿರಂಗಗೊಳಿಸಲು ಅಧಿಕಾರವಿದೆಯೇ ಎಂಬ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
|
4 |
+
ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಎನ್ಐಎ ಹಾಗೂ ಎನ್ಎಸ್ಜಿ ತಂಡಗಳು ಆಗಮಿಸಿ ತನಿಖೆ ನಡೆಸುತ್ತಿವೆ. ಬಾಂಬ್ ಸ್ಪೋಟ ಘಟನೆ ನಡೆದ ಬಳಿಕ ಎನ್ಐಎ ಮತ್ತು ಎನ್ಸ್ಜಿ ತಂಡಗಳು ತನಿಖೆ ನಡೆಸುತ್ತಿವೆ. ನಮ್ಮ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಿದರು.
|
5 |
+
ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಸಲಹೆ, ಸೂಚನೆಗಳನ್ನು ನೀಡಲಾಗಿದೆ. ಪ್ರಕರಣ ತನಿಖೆ ನಡೆಯುತ್ತಿರುವುದರಿಂದ ಕೆಲವು ವಿಚಾರಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲಾಗುವುದಿಲ್ಲ ಎಂದರು. ಸ್ಪೋಟ ಪ್ರಕರಣದ ಮೂಲ ಪತ್ತೆ ಹಚ್ಚಬೇಕಾಗಿದೆ. ವೈಯಕ್ತಿಕ ವಿಚಾರಕ್ಕೆ ಬಾಂಬ್ ಸ್ಪೋಟ ಮಾಡಲಾಗಿದೆಯೇ? ಯಾವುದಾದರೂ ಸಂಘಟನೆ ಕೈವಾಡ ಅದರ ಹಿಂದೆ ಇದೆಯೇ? ಎಂಬುದು ತನಿಖೆ ಪೂರ್ಣಗೊಂಡ ನಂತರ ಗೊತ್ತಾಗಲಿದೆ ಎಂದು ಹೇಳಿದರು.
|
eesanje/url_46_215_7.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಮಂಗಳೂರಿನಲ್ಲಿ ಮೂವರು ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ದಾಳಿ
|
2 |
+
ಮಂಗಳೂರು, ಮಾ.4- ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ಎರಚಿರುವ ಘಟನೆ ನಗರದ ಕಡಬ ಸರ್ಕಾರಿ ಕಾಲೇಜಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೂವರು ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರಿಗೆ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
|
3 |
+
ಮುಖಕ್ಕೆ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದಿದ್ದ ದುಷ್ಕರ್ಮಿ ಏಕಾಏಕಿ ಕಾಲೇಜು ಆವರಣದಲ್ಲಿ ನಿಂತಿದ್ದ ಯುವತಿಯರ ಮೇಲೆ ಆ್ಯಸಿಡ್ ಎರಚಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೇರಳ ಮೂಲದ ಈ ಆರೋಪಿಯನ್ನು ತಕ್ಷಣ ಹಿಡಿಯಲಾಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
|
4 |
+
ಈತ ಯಾರಿಗೆ ಆ್ಯಸಿಡ್ ಎರಚಲು ಬಂದಿದ್ದ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿನಿಯೊಬ್ಬಳನ್ನು ಟಾರ್ಗೆಟ್ ಮಾಡಿ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯಿಂದ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಪರೀಕ್ಷೆ ಆರಂಭಗೊಳ್ಳುವ ಕೆಲವೇ ನಿಮಿಷಗಳಲ್ಲಿ ಈ ಘಟನೆ ನಡೆದಿರುವುದು ಮಂಗಳೂರಿನಲ್ಲಿ ಆತಂಕ ಮೂಡಿಸಿದೆ.
|
eesanje/url_46_215_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಾಕ್ ಪರ ಘೋಷಣೆ : ಬಿಜೆಪಿಯಿಂದ ಎಫ್ಎಸ್ಎಲ್ ವರದಿ ಬಹಿರಂಗ
|
2 |
+
ಬೆಂಗಳೂರು,ಮಾ.4- ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್)ದ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ವಿಧಾನ ಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ.
|
3 |
+
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ನಾಸೀರ್ ಸಾಬ್ ಜಿಂದಾಬಾದ್ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ ಎಫ್ಎಸ್ಎಲ್ ವರದಿಯಲ್ಲಿ ಬಟಾ ಬಯಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ. ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿಗಳ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.
|
4 |
+
ಫೆ.27ರಂದು ರಾಜ್ಯಸಭೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ವಿಜಯಶಾಲಿಯಾದರು. ಕಾಂಗ್ರೆಸ್ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸುದ್ದಿ ಸಾಕಷ್ಟು ಚರ್ಚೆಯಾಗಲು ಆರಂಭವಾಗುತ್ತಿದ್ದಂತೆ ಪಾಕ್ ಪರ ಘೋಷಣೆ ಕೇಳಿ ಬಂದಿದೆ ಎನ್ನಲಾಗಿರುವ ವಿಡಿಯೋ ತುಣಕನ್ನು ಪರೀಕ್ಷಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ವಿಡಿಯೋ ತುಣುಕು ಎಫ್ಎಸ್ಎಲ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಧೃಡಪಟ್ಟಿದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಯಾವುದೇ ವರದಿ, ಹೇಳಿಕೆಯನ್ನು ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
|
5 |
+
ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ, ಖಾಸಗಿ ಎಫ್ಎಸ್ಎಲ್ ವರದಿ ಈಗಾಗಲೇ ಈ ಕುರಿತು ಧೃಡೀಕರಣ ನೀಡಿಯಾಗಿದೆ, ಸರ್ಕಾರಿ ವರದಿ ಕೂಡ ನಿಮ್ಮ ಕೈ ಸೇರಿದೆ ಆದಾಗ್ಯೂ ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಕಿಡಿಕಾರಿದ್ದಾರೆ. ಬೆಂದ ಮನೆಯಲ್ಲಿ ಗಳ ಇರಿಯುವ ರಾಜಕಾರಣ ಮಾಡುವ ದುರ್ಗತಿ ಬಿಜೆಪಿಗೆ ಬಂದಿಲ್ಲ ವಿಧಾನ ಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ಘೋಷಣೆ ಕೇ��ಿಬಂದರೆ ನಾವು ಕೈಕಟ್ಟಿ ಕೂರಬೇಕೇ ಈ ಸಂಬಂಧ ಮಾಧ್ಯಮಗಳ ವರದಿ ನೀವು ನಂಬಲ್ಲಿಲ್ಲ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಲಿಸಲಿಲ್ಲ, ರಾಷ್ಟ್ರ ಹಿತಾಸಕ್ತಿಯ ಈ ಗಂಭೀರ ಪ್ರಕರಣದ ಬಗ್ಗೆ ತಾತ್ಸಾರ ತೋರುತ್ತಿರುವುದರ ನಿಮ್ಮ ವರ್ತನೆ ರಾಷ್ಟ್ರ ದ್ರೋಹಿಗಳನ್ನು ರಕ್ಷಿಸಲು ಆದ್ಯತೆ ನೀಡುತ್ತಿರುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
6 |
+
ಮಾನ್ಯ@siddaramaiahನವರೇ,ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನ ಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು…../RWWmeMcc4O
|
7 |
+
ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ಪಾಕಿಸ್ತಾನ್ ಜಿಂದಾಬಾದ್ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
|
8 |
+
ವಿಧಾನಸೌಧದ ಆವರಣದಲ್ಲೇ ಪಾಕ್ ಪರ ಘೋಷಣೆ ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು ಧೈರ್ಯ ತೋರಿದ್ದಾರೆ. ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಪೋಟವಾಗುತ್ತದೆ ಎಂದರೆ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ ಎಂಬುದು ಬಹುದೊಡ್ಡ ಪ್ರಶ್ನೆಯಾಗಿ ರಾಜ್ಯದ ಜನರನ್ನು ಕಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಗತ ಶಕ್ತಿಗಳಿಗೆ ಸ್ವತಂತ್ರ್ಯ ದೊರೆತ ವಾತಾವರಣ ನಿರ್ಮಾಣವಾಗಿದೆ, ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
9 |
+
ಕಳೆದ ಫೆ.27ರಂದು ರಾಜ್ಯಸಭೆಯ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿತ್ತು. ಪಾಕಿಸ್ತಾನ ಜಿಂದಾಬಾದ್ ಕೂಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್ ಸಮರ್ಥಿಸಿಕೊಂಡಿದ್ದರು.
|
eesanje/url_46_215_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಎನ್ಐಎಗೆ ಹಸ್ತಾಂತರ
|
2 |
+
ನವದೆಹಲಿ, ಮಾ.4 (ಪಿಟಿಐ) ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಮಾರ್ಚ್ 1 ರಂದು ಪೂರ್ವ ಬೆಂಗಳೂರಿನ ಇಂದಿರಾನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದರು.
|
3 |
+
ಮೂಲಗಳ ಪ್ರಕಾರ ಸ್ಪೋಟದ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸಲಾಗಿದೆ. ಟೋಪಿ, ಮುಖವಾಡ ಮತ್ತು ಕನ್ನಡಕ ಧರಿಸಿದ ವ್ಯಕ್ತಿ ಪ್ರಕರಣದ ಪ್ರಮುಖ ಶಂಕಿತನಾಗಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಮಂಗಳೂರು ಕುಕ್ಕರ್ ಬ್ಲಾಸ್ಟ್ ಹಾಗೂ ಶಿವಮೊಗ್ಗದ ನದಿ ತೀರದಲ್ಲಿ ನಡೆಸಿದ್ದ ಟ್ರಯಲ್ ಬ್ಲಾಸ್ಟ್ ಪ್ರಕರಣದ ಹೊಣೆಯನ್ನು ಸಿರಿಯಾ ಮೂಲದ ಐಸಿಸ್ ಸಂಘಟನೆ ಒಪ್ಪಿಕೊಂಡಿತ್ತು. ಆದರೆ, ಬೆಂಗಳೂರಿನ ರಾಮೇಶ್ವರಂ ಕೆಫೆ ಪ್ರಕರಣದ ಹೊಣೆಯನ್ನು ಇದುವರೆಗೂ ಯಾವ ಸಂಘಟನೆಗಳು ಒಪ್ಪಿಕೊಂಡಿಲ.ಆದರೂ ಮೇಲಿನ ಎರಡು ಪ್ರಕರಣಗಳಿಗೂ ರಾಮೇಶ್ವರಂ ಪ್ರಕರಣಕ್ಕೂ ಸಾಮ್ಯತೆ ಇರುವುದನ್ನು ಮನಗಂಡಿದ್ದ ಬೆಂಗಳೂರು ಪೊಲೀಸರು ಆರೋಪಿ ಬಂಧನಕ್ಕೆ ಇನ್ನಿಲ್ಲದ ಕಾರ್ಯಾಚರಣೆ ನಡೆಸುತ್ತಿವೆ.
|
4 |
+
ಆರೋಪಿ ತಮಿಳುನಾಡು ಇಲ್ಲವೇ ಕೇರಳಕ್ಕೆ ಪರಾರಿಯಾಗಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಲವಾರು ವಿಶೇಷ ಪೊಲೀಸ್ ತಂಡಗಳು ನೆರೆ ರಾಜ್ಯಕ್ಕೆ ದೌಡಾಯಿಸಿ ಆರೋಪಿ ಎಡೆಮುರಿ ಕಟ್ಟಲು ಹರಸಾಹಸ ನಡೆಸುತ್ತಿವೆ.ರಾಮೇಶ್ವರಂ ಕೆಫೆಗೆ ರಾಷ್ಟ್ರೀಯ ಭದ್ರತಾ ದಳದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ಆದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪ್ರಕರಣ ಬೇಧಿಸಲು ನಮ ಪೊಲೀಸರೇ ಸಮರ್ಥರಾಗಿದ್ದಾರೆ ಎಂದು ಹೇಳಿಕೊಂಡಿದ್ದರು. ಆದರೆ, ಇದೀಗ ಪ್ರಕರಣದ ಗಂಭೀರತೆ ಅರಿತ ನಂತರ ರಾಮೇಶ್ವರಂ ಕೆಫೆ ಸ್ಪೋಟದ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
|
eesanje/url_46_216_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಭಾರತ ಪೋಲಿಯೋ ಮುಕ್ತ ರಾಷ್ಟ್ರ ಸ್ಥಿತಿ ಕಾಪಾಡಿಕೊಳ್ಳಬೇಕು : ದಿನೇಶ್ ಗುಂಡೂರಾವ್
|
2 |
+
ಬೆಂಗಳೂರು, ಮಾ.3-ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿರುವುದನ್ನು ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಇಂದಿನಿಂದ ಮಾರ್ಚ್ 6ರ ವರೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಪೋಲಿಯೋ ಲಸಿಕಾ ಅಭಿಯಾನದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
|
3 |
+
ವೈಲ್ಡ್ ಪೋಲಿಯೋ ವೈರಸ್ನ ಪಸರಿಸುವಿಕೆಯು ಇಂದಿಗೂ ಜಗತ್ತಿನಾದ್ಯಂತ ಮಕ್ಕಳನ್ನು ಬಾಧಿಸುತ್ತಿದೆ. ಇದರಲ್ಲಿ ನೆರೆ ರಾಷ್ಟ್ರಗಳೂ ಸೇರಿರುವುದು ಭಾರತಕ್ಕೆ ಕಳವಳಕಾರಿಯಾಗಿದೆ. ಹೀಗಾಗಿ ಪೋಲಿಯೋ ನಿರ್ಮೂಲನೆ ಸ್ಥಿತಿಯನ್ನು ಭಾರತ ಕಾಯ್ದುಕೊಳ್ಳಬೇಕಿದೆ. ಭಾರತದ ಪರಿಣಿತರ ಸಲಹಾ ಸಮೂಹದ ಶಿಫಾರಸಿನನ್ವಯ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಈ ಲಸಿಕೆ ಹಾಕಲು ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನವನ್ನು ಇಂದಿನಿಂದ ಮಾರ್ಚ್ 6ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು.
|
4 |
+
ಇಂದು ಪೋಲಿಯೋ ಬೂತ್ಗಳಲ್ಲಿ, ಮುಂದಿನ 2 – 3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ವಲಸಿಗ ಸಮುದಾಯದ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಹಾಗೂ ನಗರ ಪ್ರದೇಶದ ಕೊಳಗೇರಿಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನವೀನ್ ಭಟ್ ತಿಳಿಸಿದ್ದಾರೆ.
|
5 |
+
ಪಿ-2 ವಿಧದ ಪೋಲಿಯೋ ಸೋಂಕು ಜಾಗತಿಕ ಮಟ್ಟದಲ್ಲಿ ನಿರ್ಮೂಲನೆಯಾಗಿದೆ. ಪಿ-3 ಯ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ. ಇದಕ್ಕೆ ಅಕೃತವಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಕ್ಟೋಬರ್ 2019ರಲ್ಲಿ ಪ್ರಮಾಣಪತ್ರ ಪಡೆದಿದೆ. ಈಗ ಪಿ-1 ಪ್ರಕರಣಗಳು ಮಾತ್ರವೇ ವರದಿಯಾಗುತ್ತಿವೆ. 2011ರ ಜನವರಿ 13ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕೊನೆಯ ಪೋಲಿಯೋ ಪ್ರಕರಣವು ವರದಿಯಾಗಿತ್ತು. ಇದಾದ ಮೇಲೆ ಭಾರತದಲ್ಲಿ ಇದುವರೆವಿಗೂ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದರು.
|
6 |
+
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಪ್ರತಿ ಶಿಶುವಿಗೆ 5 ವರಸೆ ಒಪಿವಿ(ಓರಲ್ ಪೋಲಿಯೋ ವ್ಯಾಕ್ಸಿನ್) ಮತ್ತು 3 ವರಸೆ ಐಪಿವಿ(ಇನ್ಜಕ್ಟಬಲ್ ಪೋಲಿಯೋ ವ್ಯಾಕ್ಸಿನ್) ಲಸಿಕೆಗಳನ್ನು ನೀಡಲಾಗುತ್ತಿದೆ. ಯಾವುದೇ ಮಗುವು ಲಸಿಕೆಯಿಂದ ವಂಚಿತರಾಗದಂತೆ ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.
|
7 |
+
ಸುಮಾರು 33712 ಪೋಲಿಯೋ ಬೂತ್ಗಳನ್ನ ತೆರೆಯಲಾಗಿದ್ದು, 111370 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. 963 ಸಂಚಾರಿ ತಂಡಗಳನ್ನು ರಚಿಸಲಾಗಿದ್ದು, 7206 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಈ ಹಿಂದೆ ಎಷ್ಟು ಬಾರಿ ಪೋಲಿಯೋ ಲಸಿಕೆ ಪಡೆದಿದ್ದರೂ ಸಹ ಈ ಅಭಿಯಾನದಲ್ಲಿ ಮತ್ತೆ ಲಸಿಕೆ ಹಾಕಿಸುವುದು ಅವಶ್ಯಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆರೋಗ್ಯ ಕೇಂದ್ರವನ್ನು ಭೇಟಿ ಮಾಡಿ ಅಥವಾ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಎಂದರು.
|
eesanje/url_46_216_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಹೆಬ್ಬಾರ್-ಎಸ್.ಟಿ.ಸೋಮಶೇಖರ್ಗೆ ಬಿಜೆಪಿ ನೋಟಿಸ್
|
2 |
+
ಬೆಂಗಳೂರು,ಮಾ.2- ರಾಜ್ಯಸಭೆ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವ ಕುರಿತು ಶಾಸಕರಾದ ಎಸ್.ಟಿ.ಸೋಮ ಶೇಖರ್ ಮತ್ತು ಶಿವರಾಮ್ ಹೆಬ್ಬಾರ್ಗೆ ಬಿಜೆಪಿ ನೋಡಟಿಸ್ ಜಾರಿ ಮಾಡಿದೆ. ಬಿಜೆಪಿ ಮುಖ್ಯ ಸಚೇತಕ ದೊಡ್ಡನಗೌಡರ್ ಪಾಟೀಲ್ ಅವರು ಈ ಇಬ್ಬರು ಶಾಸಕರಿಗೆ ಕಾರಣ ಕೇಳಿ ಮಾ.5ರೊಳಗೆ ಉತ್ತರ ನೀಡಬೇಕೆಂದು ನೋಟಿಸ್ ಕಳುಹಿಸಿದ್ದಾರೆ.
|
3 |
+
ಸಂವಿಧಾನದ 10ನೇ ಶೆಡ್ಯೂಲ್ನಡಿ ಬರುವ ಪಕ್ಷಾಂತರ ಮತ್ತು ಅನರ್ಹತೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಕಳೆದ ಫೆ.26ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದಾರೆಂಬ ಆರೋಪವಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿ ನಾರಾಯಣ ಸಾ ಭಾಂಡಗೆ ಮತ ಹಾಕುವಂತೆ ಬಿಜೆಪಿ ವಿಪ್ ಜಾರಿ ಮಾಡಿತ್ತು. ಇದನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆಂಬ ಆರೋಪವಿದೆ.
|
4 |
+
ಬಿಜೆಪಿ ಚುನಾವಣಾ ಏಜೆಂಟರಾಗಿದ್ದ ಸುನೀಲ್ಕುಮಾರ್ ಅವರಿಗೆ ಮತದಾನಕ್ಕೂ ಮುನ್ನ ತೋರಿಸಿಯೇ ಅಡ್ಡ ಮತದಾನ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅನಾರೋಗ್ಯದ ಕಾರಣ ಮತದಾನಕ್ಕೆ ಬಾರದೆ ಗೈರು ಹಾಜರಾಗಿದ್ದರು. ನನಗೆ ಆರೋಗ್ಯ ಸರಿ ಇಲ್ಲದ ಕಾರಣ ನಾನು ಮತದಾನ ಮಾಡಲು ಹೋಗಿರಲಿಲ್ಲ. ಇದರಲ್ಲಿ ಯಾವುದೇ ದುರದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು.
|
5 |
+
ಆದರೆ ಇದನ್ನು ಒಪ್ಪದ ಬಿಜೆಪಿ ಮತದಾನ ಹಿಂದಿನ ದಿನ ಸೋಮವಾರ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್, ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಅವರ ಕಾರಿನಲ್ಲಿ ಕಾಂಗ್ರೆಸ್ ಶಾಸಕರು ತಂಗಿದ್ದ ಹೆಬ್ಬಾಳ ಸಮೀಪದ ಮ್ಯಾನತಾಟೆಕ್ ಪಾರ್ಕ್ ಹತ್ತಿರ ಹಿಲ್ಟನ್ ರೆಸಾರ್ಟ್ಗೆ ಭೇಟಿ ನೀಡಿದ್ದರೆಂಬ ಮಾತು ಕೇಳಿಬಂದಿತ್ತು. ಇದೀಗ ಈ ಇಬ್ಬರು ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕ ಸ್ಥಾನವನ್ನು ಅನರ್ಹಗೊಳಿಸಲು ಬಿಜೆಪಿ ಮುಂದಾಗಿದೆ.
|
eesanje/url_46_216_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಸ್ಫೋಟ : ಉಗ್ರನ ಪತ್ತೆಗೆ ಪೊಲೀಸರ ಹರ ಸಾಹಸ
|
2 |
+
ಬೆಂಗಳೂರು,ಮಾ.2- ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ಪರಾರಿಯಾಗಿರುವ ಉಗ್ರ ಯಾರೆಂಬುದು ಈತನಕ ನಗರ ಪೊಲೀಸರಿಗೆ ತಿಳಿದುಬಂದಿಲ್ಲ. ಆತನ ಗುರುತು ಪತ್ತೆಗಾಗಿ ನಗರ ಪೊಲೀಸರು ಮತ್ತು ಕೇಂದ್ರ ತನಿಖಾ ತಂಡಗಳು ಹರಸಾಹಸ ಪಡುತ್ತಿವೆ. ಸುಮಾರು 25 ರಿಂದ 30 ವರ್ಷದ ಉಗ್ರ ನಿನ್ನೆ ಮಧ್ಯಾಹ್ನ ಸುಮಾರು 12 ಗಂಟೆಯಲ್ಲಿ ಮೊದಲೇ ಮಾಡಿಕೊಂಡ ಸಂಚಿನಂತೆ ತನ್ನ ಗುರುತು ಯಾರಿಗೂ, ಎಲ್ಲಿಯೂ ಗೊತ್ತಾಗದಂತೆ ತಲೆಗೆ ಬಿಳಿಬಣ್ಣದ ಟೋಪಿ, ಮುಖಕ್ಕೆ ಮಾಸ್ಕ್ ಹಾಗೂ ಕನ್ನಡಕವನ್ನು ಧರಿಸಿ ಕಪ್ಪು ಬಣ್ಣದ ಬ್ಯಾಗ್ ಹಾಕಿಕೊಂಡು ಹೋಟೆಲ್ ಒಳಗೆ ಪ್ರವೇಶಿಸಿದ್ದಾನೆ.
|
3 |
+
ನಂತರ ಕ್ಯಾಶಿಯರ್ ಕೌಂಟರ್ ಬಳಿ ಹೋಗಿ ಹಣ ಕೊಟ್ಟು ಟೋಕನ್ ತೆಗೆದುಕೊಂಡು ರವೆ ಇಡ್ಲಿಯನ್ನು ಟೇಬಲ್ ಬಳಿ ತಂದಿಟ್ಟುಕೊಂಡು ತಿಂದು ನಂತರ ಕೈ ತೊಳೆಯಲು ವಾಶ್ಬೇಸಿನ್ ಬಳಿ ಹೋಗಿ ಯಾರಿಗೂ ಅನುಮಾನ ಬಾರದಂತೆ ತಾನು ತಂದಿದ್ದ ಬ್ಯಾಗ್ಅನ್ನು ಕೆಳಗಿಟ್ಟು ಕೈ ತೊಳೆದುಕೊಂಡು ತಾನು ಕಟ್ಟಿದ್ದ ವಾಚ್ನಲ್ಲಿ ಟೈಂ ನೋಡಿಕೊಂಡು ಹೊರಹೋಗಿದ್ದಾನೆ ಈ ಎಲ್ಲಾ ದೃಶ್ಯಗಳು ಹೋಟೆಲ್ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.
|
4 |
+
ಆತ ಹೋದ ಸುಮಾರು ಒಂದು ಗಂಟೆಯ ಅಂತರದಲ್ಲಿ ಬ್ಯಾಗ್ನಿಂದ 2 ಬಾರಿ ಸ್ಪೋಟವಾಗಿದ್ದು, ಘಟನಾ ಸ್ಥಳದಲ್ಲಿ ನಟ್ಟು, ಬೋಲ್ಟು, ಬ್ಯಾಟರಿ ಪತ್ತೆಯಾಗಿವೆ. ಒಟ್ಟಾರೆ ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಆತನ ಚಲನವಲನ ಸೆರೆಯಾಗಿದ್ದು, ಆ ಆಧಾರದಲ್ಲಿ ಆತನ ಪತ್ತೆ ಕಾರ್ಯ ಮುಂದುವರೆದಿದೆ.
|
5 |
+
ಸಿಸಿ ಕ್ಯಾಮೆರಾಗಳ ಪರಿಶೀಲನೆ
|
6 |
+
ಬೆಂಗಳೂರು,ಮಾ.2- ರಾಮೇಶ್ವರಂ ಕೆಫೆ ಐಟಿಪಿಎಲ್ ರಸ್ತೆಯಲ್ಲಿದ್ದು, ಆ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳ ಫುಟೇಜ್ಗಳನ್ನು ತನಿಖಾ ತಂಡವೊಂದು ಪರಿಶೀಲನೆ ನಡೆಸುತ್ತಿದೆ. ಆರೋಪಿಯು ಈ ಸ್ಥಳಕ್ಕೆ ಬಸ್ನಲ್ಲಿ ಬಂದು ಇಳಿದಿರುವ ಹಿನ್ನಲೆಯಲ್ಲಿ ಈ ಮಾರ್ಗಗಳಲ್ಲಿ ನಿನ್ನೆ ಸಂಚರಿಸಿರುವ ಎಲ್ಲ ಬಸ್ಗಳಲ್ಲಿನ ಸಿಸಿ ಕ್ಯಾಮೆರಾಗಳನ್ನು ಸಿಸಿಬಿ ತಂಡವೊಂದು ಪರಿಶೀಲಿಸುತ್ತಿದೆ.
|
7 |
+
ಆರೋಪಿಯು ಯಾವ ಸ್ಥಳದಿಂದ ಯಾವ ಬಸ್ನಲ್ಲಿ ಬಂದ, ಎಲ್ಲಿ ಇಳಿದ, ಕೆಫೆಯಲ್ಲಿ ಬಾಂಬ್ ಇಟ್ಟು ಯಾವ ಕಡೆಗೆ, ಎಲ್ಲಿಗೆ ಹೋಗಿದ್ದಾನೆ ಎಂಬ ಬಗ್ಗೆ ತನಿಖಾ ತಂಡಗಳು ಸಿಸಿಟಿವಿ ಫುಟೇಜ್ಗಳನ್ನು ಕೂಲಂಕುಷವಾಗಿ ಪರಿಶೀಲಿಸುತ್ತಿದ್ದಾರೆ. ಮತ್ತೊಂದು ತಂಡ ರಾಮೇಶ್ವರಂ ಕೆಫೆಗೆ ತೆರಳಿ ಮತ್ತೊಮ್ಮೆ ಸಿಸಿಕ್ಯಾಮೆರಾ ಫುಟೇಜ್ಗಳನ್ನು ಪರಿಶೀಲಿಸುತ್ತಿದೆ. ಪೊಲೀಸರ ನಿದ್ದೆಗೆಡಿಸಿರುವ ಆರೋಪಿಗಾಗಿ ತನಿಖಾ ತಂಡಗಳು ಹಗಲಿರುಳು ಶ್ರಮಿಸುತ್ತಿವೆ.
|
eesanje/url_46_216_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಾಂಬ್ ಸ್ಪೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ : ವಿಜಯೇಂದ್ರ
|
2 |
+
ಬೆಂಗಳೂರು,ಮಾ.2- ಬಾಂಬ್ ಸ್ಪೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ಎಸ್ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ದೃಢಪಟ್ಟಿದೆ ಎಂದರು.
|
3 |
+
ಇಂಥ ಸಂದರ್ಭದಲ್ಲಿ ರಾಜ್ಯ ಸರಕಾರ, ಸಚಿವರ ಹೇಳಿಕೆಗಳು ಕೇವಲ ಬಿಜೆಪಿ ಮಾತ್ರವಲ್ಲ, ಸಾಮಾನ್ಯಜನರಿಗೂ ವಿಶ್ವಾಸ ಹುಟ್ಟಿಸುವಂತಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ದೇಶದ್ರೋಹಿಗಳ ಬಗ್ಗೆ ಸಚಿವರು ಆ ರೀತಿ ಘೋಷಣೆ ಕೂಗಿಯೇ ಇಲ್ಲ ಎಂದಿದ್ದರು. ಬಿಜೆಪಿಯವರಿಗೆ ಮಾಡುವುದಕ್ಕೆ ಕೆಲಸ ಇಲ್ಲ ಎಂದಿದ್ದರು. ವಿಧಾನಸೌಧಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಸಿ.ಸಿ.ಟಿ.ವಿ. ಫೂಟೇಜ್ ಗಮನಿಸಿ ಅರ್ಧ ಗಂಟೆಯಲ್ಲಿ ಅವರನ್ನೆಲ್ಲ ಹಿಡಿದು ಒಳಗೆ ಹಾಕಬೇಕಿತ್ತು. ಅದನ್ನೂ ಮಾಡಿಲ್ಲ ಎಂದು ಆಕ್ಷೇಪಿಸಿದರು.
|
4 |
+
ಎಫ್ಎಸ್ಎಲ್ ವರದಿ ಗಮನಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಹೇಳಿದ್ದಾರೆ. ಘಟನೆ ನಡೆದು ನಾಲ್ಕೈದು ದಿನ ಕಳೆದಿದೆ. ಇವತ್ತಿಗೂ ಎಫ್.ಎಸ್.ಎಲ್ ವರದಿ ಬಂದಿಲ್ಲ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದರು. ಎಫ್.ಎಸ್.ಎಲ್ ವರದಿ ಬಂದಿದೆ; ಪಾಕ್ ಪರ ಘೋಷಣೆ ದೃಢವಾಗಿದೆ ಎಂದು ಪತ್ರಿಕೆಗಳು, ಮಾಧ್ಯಮಗಳು ವರದಿ ಮಾಡಿವೆ. ಇದರ ಮಧ್ಯೆ ಮುಖ್ಯಮಂತ್ರಿಗಳು ಎಫ್.ಎಸ್.ಎಲ್ ವರದಿ ಬಂದೇ ಇಲ್ಲ ಎಂದು ಮೈಸೂರಿನಲ್ಲಿ ಹೇಳಿದ್ದಾರೆ ಎಂದು ವಿವರಿಸಿದರು.
|
5 |
+
ರಾಜ್ಯದ ಜನರಲ್ಲೂ ಆತಂಕ ಕಾಡುತ್ತಿದೆ. ಇಂಥ ಘಟನೆಗಳನ್ನು ಎಷ್ಟು ಗಂಭೀರವಾಗಿ ರಾಜ್ಯ ಸರಕಾರ ತೆಗೆದುಕೊಳ್ಳಬೇಕೋ, ಇಂಥ ಘಟನೆ ನಡೆದಾಗ ಪೊಲೀಸ್ ಅಧಿಕಾರಿಗಳು ಎಷ್ಟು ಗಂಭೀರವಾಗಿ ವರ್ತಿಸಬೇಕೋ ಅಂಥ ಗಂಭೀರತೆ ಮೇಲ್ನೋಟಕ್ಕೆ ಕಾಣುತ್ತಿಲ್ಲ ಎಂದು ಅವರು ಆಕ್ಷೇಪಿಸಿದರು. ಪಾಕಿಸ್ತಾನ ಜಿಂದಾಬಾದ್ ಘಟನೆ ಕುರಿತು ನಿರ್ಧರಿಸಲು 5 ದಿನ ಬೇಕೇ? ಇದು ನಾಚಿಕೆಗೇಡಿನ ಸಂಗತಿ ಅಲ್ಲವೇ ಎಂದು ಮರುಪ್ರಶ್ನೆ ಹಾಕಿದರು.ಹಾದಿಬೀದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದ್ದಲ್ಲ. ವಿಧಾನಸೌಧದಲ್ಲಿ ಕೂಗಿರುವಾಗ ದೇಶದ್ರೋಹಿಗಳನ್ನು ಬಂಧಿಸಿಲ್ಲವೆಂದರೆ ನಿಮ್ಮ ಇಚ್ಛಾಶಕ್ತಿ ಕೊರತೆಯೇ? ಅಥವಾ ದೇಶದ್ರೋಹಿಗಳನ್ನು ರಕ್ಷಿಸುವ ಪ್ರಯತ್ನದ ಜೊತೆಗೆ, ಅಲ್ಪಸಂಖ್ಯಾತರ ಭಾವನೆಗೆ ಧಕ್ಕೆ ಆಗುವುದೆಂಬ ಭಯ ನಿಮ್ಮನ್ನು ಕಾಡುತ್ತಿದೆಯೇ; ಅದನ್ನು ಸ್ಪಷ್ಟವಾಗಿ ಹೇಳುವಂತೆ ಆಗ್ರಹಿಸಿದರು.
|
6 |
+
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ರಾಜ್ಯ ಸರಕಾರದ ನಡವಳಿಕೆ ಮತ್ತು ಸಚಿವರ ಹೇಳಿಕೆಗಳು, ಶಿವಮೊಗ್ಗದ ಟಿಪ್���ು ಜಯಂತಿ ಸಂದರ್ಭದಲ್ಲಿ ದೇಶದ್ರೋಹಿಗಳ ಅಟ್ಟಹಾಸ, ಕುಕ್ಕರ್ ಬ್ಲಾಸ್ಟ್ನಲ್ಲಿ ಅಪರಾಧಿಗಳನ್ನು ಅಮಾಯಕರೆಂದು ಬಿಂಬಿಸುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರರ ಹೇಳಿಕೆಗಳು ರಾಜ್ಯದಲ್ಲಿ ಅಶಾಂತಿ ಮೂಡಲು ಕಾರಣವಾಗುತ್ತಿದೆ ಎಂದು ತಿಳಿಸಿದರು.
|
7 |
+
ಗೌರವಾನ್ವಿತ ಮುಖ್ಯಮಂತ್ರಿಗಳು, ಸರಕಾರ ಇಂಥ ಘಟನೆಗಳನ್ನು ಹೆಚ್ಚು ಜವಾಬ್ದಾರಿಯುತವಾಗಿ ನಿಭಾಯಿಸಬೇಕು. ಸಚಿವರು ಬೇಜವಾಬ್ದಾರಿ ಹೇಳಿಕೆ ಕೊಡದಂತೆ ನಿಲ್ಲಿಸಬೇಕು ಎಂದು ಅವರು ಕಳಕಳಿಯಿಂದ ಮನವಿ ಮಾಡುವುದಲ್ಲದೆ ಆಗ್ರಹಿಸುವುದಾಗಿ ಹೇಳಿದರು. ಏನೂ ಆಗಿಯೇ ಇಲ್ಲ ಎಂಬಂತೆ ಸಚಿವರು ಮನಸೋ ಇಚ್ಛೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಟೀಕಿಸಿದರು.
|
eesanje/url_46_216_2.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಸಂಕಲ್ಪ : 3 ಲಕ್ಷ ಜನರ ಅಭಿಪ್ರಾಯ ಸಂಗ್ರಹಕ್ಕೆ ಚಾಲನೆ
|
2 |
+
ಬೆಂಗಳೂರು, ಮಾ.3- ಬಿಜೆಪಿ ಸಂಕಲ್ಪ ಪತ್ರಕ್ಕಾಗಿ ರಾಜ್ಯದ ಕನಿಷ್ಠ 3 ಲಕ್ಷ ಜನರ ಅಭಿಪ್ರಾಯ ಸಂಗ್ರಹದ ಗುರಿ ಇದೆ. ದೇಶದಲ್ಲಿ 1 ಕೋಟಿ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹಣಾ ಅಭಿಯಾನದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಲಹಾ ಪೆಟ್ಟಿಗೆ ಇಡಲಾಗುತ್ತದೆ. ಮಿಸ್ಡ್ ಕಾಲ್ ನೀಡುವುದರ ಮೂಲಕ ಪಾಲ್ಗೊಳ್ಳಬಹುದು. ಕರೆ ಮಾಡಲು ಸಂಖ್ಯೆ : 909090-2124 ನೀಡಲಾಗಿದೆ ಎಂದರು.
|
3 |
+
ಮುಂದಿನ ಲೋಕಸಭಾ ಚುನಾವಣೆಯ ಕ್ಷಣಗಣನೆ ಸಂದರ್ಭದಲ್ಲಿ ನರೇಂದ್ರ ಮೋದಿಜೀ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಚಿಂತನೆಯಂತೆ ಪ್ರಣಾಳಿಕೆ ಬದಲು ಜನಾಭಿಪ್ರಾಯ ಪಡೆದು ಸಂಕಲ್ಪ ಪತ್ರದ ಮೂಲಕ ಚುನಾವಣೆ ಎದುರಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಬಿಜೆಪಿ ಕೇಂದ್ರ ಸರಕಾರವು 2014ರ, 2019ರ ಚುನಾವಣೆ ಸಂದರ್ಭದಲ್ಲಿ ನೀಡಿದ ಬಹುತೇಕ ಎಲ್ಲ ಭರವಸೆಗಳನ್ನು ಈಡೇರಿಸಿದೆ. 10 ವರ್ಷದ ಮೋದಿಜೀ ಅವರ ಆಡಳಿತಾವಧಿಯಲ್ಲಿ ಭರವಸೆ ಈಡೇರಿಸಿದ್ದಲ್ಲದೆ, ಯೋಜನೆ ಶಂಕುಸ್ಥಾಪನೆ ಜೊತೆಗೆ ಉದ್ಘಾಟನಾ ದಿನಾಂಕ ನಿಗದಿಪಡಿಸಿ ಸಕಾಲದಲ್ಲಿ ಪೂರ್ಣಗೊಳಿಸಿದ್ದನ್ನು ನೋಡಿದ್ದೇವೆ ಎಂದು ವಿವರಿಸಿದರು.
|
4 |
+
ಜನಸಂಘ ಕಾಲದಿಂದ ಪ್ರಣಾಳಿಕೆಯಲ್ಲಿ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನಕ್ಕೆ ಕಾರಣವಾದ ಜಮ್ಮು- ಕಾಶ್ಮೀರದ 370ನೇ ವಿಧಿ ರದ್ದು ಮಾಡುವ ಮೂಲಕ ಮೋದಿಯವರು ನುಡಿದಂತೆ ನಡೆದಿದ್ದಾರೆ. ಅಯೋಧ್ಯೆಯಲ್ಲಿ ಬಾಲರಾಮನ ಭವ್ಯ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಈ ಬಾರಿ ಘೋಷಣಾ ಪತ್ರ ಪ್ರಣಾಳಿಕೆ ಬದಲು ಸಂಕಲ್ಪ ಪತ್ರ ಮುಂದಿಡಲಾಗುವುದು ಎಂದರು.
|
5 |
+
ಸ್ವಾತಂತ್ರ್ಯೋತ್ಸವದ 100ನೇ ವರ್ಷಾಚರಣೆ ವೇಳೆ 2047ರಲ್ಲಿ ನಮ್ಮ ಭಾರತ ವಿಕಸಿತ ಭಾರತ ಎಂಬ ಸಂಕಲ್ಪವನ್ನು ಮೋದಿಜೀ ಅವರು ಮುಂದಿಟ್ಟಿದ್ದಾರೆ. ಅದನ್ನು ಸಾಕಾರಗೊಳಿಸಲು ಅಭಿಪ್ರಾಯ ಸಂಗ್ರಹದ ಅಭಿಯಾನ ಆರಂಭಿಸಿದೆ. ಸಮಾಜದ ರೈತರು, ಮಹಿಳೆಯರು, ಯುವಜನತೆ ಸೇರಿ ಎಲ್ಲ ವರ್ಗದ ಜನರಿಂದ ಅಭಿಮತ ಸಂಗ್ರಹಿಸಲಿದ್ದೇವೆ ಎಂದು ವಿವರಿಸಿದರು. ಕರ್ನಾಟಕದಲ್ಲಿ ಅಭಿಯಾನ ಮಾರ್ಚ್ 3 ರಿಂದ 15 ರ ತನಕ ನಡೆಯಲಿದೆ. “ವಿಕಸಿತ ಭಾರತ – ಇದು ಮೋದಿ ಗ್ಯಾರಂಟಿ” ಈ ವಿಷಯದ ಕುರಿತು ರಾಜ್ಯಾದ್ಯಂತ ವಿಡಿಯೋ ವ್ಯಾನ್ ಹಾಗೂ ಸಲಹೆ ಪೆಟ್ಟಿಗೆಗಳ ಮೂಲಕ ಮುಂದಿನ 5 ವರ್ಷಗಳ ಗುರಿಯ ಕುರಿತು ರಾಜ್ಯದ ಜನರ ಆಶೀರ್ವಾದ ಪಡೆದು ಸಲಹೆಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
|
6 |
+
ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮಾತನಾಡಿ, ಭಾರತ ವಿಶ್ವಗುರುವಾಗುವುದು ಎಲ್ಲರ ಬಯಕೆ. ಇದಕ್ಕಾಗಿ ಪ್ರತಿ ಪ್ರಜೆಯ ಸಂಕ��್ಪವನ್ನು ದಾಖಲಿಸಲು ಈ ಅಭಿಯಾನ ಮಾಡಲಾಗುತ್ತಿದೆ. ರಸ್ತೆ ಬದಿ ವ್ಯಾಪಾರಿ, ಪೊಲೀಸ್ ಕಾನ್ಸ್ಟೆಬಲ್, ಇಂಜಿನಿಯರ್, ಕ್ರೀಡಾಪಟು ಸೇರಿ ಪ್ರತಿಯೊಬ್ಬರ ಭಾವನೆಗೆ ಅವಕಾಶವಿದೆ ಎಂದು ವಿವರಿಸಿದರು.
|
7 |
+
ಬಿಜೆಪಿ ಸಂಕಲ್ಪ ಪತ್ರವು ವಿಸ್ತøತ ಅಭಿಪ್ರಾಯವನ್ನು ಹೊಂದಿರುತ್ತದೆ. ಶಿಕ್ಷಣ, ಕ್ರೀಡೆ, ಧಾರ್ಮಿಕ ಭಾವನೆಗಳ ರಕ್ಷಣೆ ಸೇರಿ ಎಲ್ಲ ಭಾವನೆಗಳ ಸಂಗ್ರಹ ನಡೆಯಲಿದೆ. ಕರ್ನಾಟಕದಲ್ಲಿ 3 ಲಕ್ಷಕ್ಕಿಂತ ಹೆಚ್ಚು ಜನರು ಅಭಿಪ್ರಾಯ ನೀಡುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಮೋದಿ ಗ್ಯಾರಂಟಿ ನಿಜವಾದುದು. ಇತರ ಪಕ್ಷಗಳದು ನೀರಿನ ಮೇಲೆ ಗುಳ್ಳೆ ಇದ್ದಂತೆ ಎಂದು ಜನರಿಗೂ ಅರಿವಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ನೈಜ ಗ್ಯಾರಂಟಿಯನ್ನು ಮೋದಿಜೀ ಕೊಟ್ಟಿದ್ದಾರೆ. ಓಲೈಕೆ ರಾಜಕಾರಣ ಬಿಜೆಪಿಯದಲ್ಲ ಎಂದು ಹೇಳಿದರು. ಜನರು ಈ ಅಭಿಯಾನದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ನೀಡಬೇಕು ಎಂದು ಮನವಿ ಮಾಡಿದರು.
|
8 |
+
ರಾಜ್ಯ ಉಪಾಧ್ಯಕ್ಷೆ ಮತ್ತು ಅಭಿಯಾನದ ಸಹ ಸಂಚಾಲಕಿ ಶ್ರೀಮತಿ ಮಾಳವಿಕಾ ಅವಿನಾಶ್ ಅವರು ಮಾತನಾಡಿ, ಸಂಕಲ್ಪ ಪತ್ರಕ್ಕೆ ಡಿಜಿಟಲ್ ಮೀಡಿಯ ಮೂಲಕ ಅಥವಾ ನಮೋ ಆಪ್ ಮೂಲಕ ದಾಖಲಿಸಲು ಅವಕಾಶವಿದೆ. ಇದನ್ನು ಬಳಸಿಕೊಳ್ಳಿ ಎಂದು ವಿನಂತಿಸಿದರು. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಖ್ಯಾತ ಕ್ರಿಕೆಟ್ ತಾರೆ ವೆಂಕಟೇಶಪ್ರಸಾದ್, ಸಾಹಿತಿ- ಐಎಎಸ್ ಅಧಿಕಾರಿ, ಅಭಿಯಾನದ ಸಹ ಸಂಚಾಲಕ ಸಿ.ಆರ್.ಸೋಮಶೇಖರ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಮತ್ತಿತರರು ಉಪಸ್ಥಿತರಿದ್ದರು.
|
9 |
+
ನರೇಂದ್ರ ಮೋದಿಯವರ ಸರಕಾರದ ಸಾಧನೆಗಳ ವಿಡಿಯೋ ಪ್ರದರ್ಶನವಿತ್ತು. ಕ್ರಿಕೆಟ್ ತಾರೆ ವೆಂಕಟೇಶಪ್ರಸಾದ್ ಸೇರಿ ಹಲವರು ಇದೇ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ಸಲಹಾ ಪೆಟ್ಟಿಗೆಗೆ ಹಾಕಿದರು.
|
eesanje/url_46_216_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಕತಾರ್ನಲ್ಲಿ ಚೈತ್ರಾ ಹೆಬ್ಬಾರ್ ಪತ್ತೆ
|
2 |
+
ಮಂಗಳೂರು,ಮಾ.3- ನಾಪತ್ತೆಯಾಗಿದ್ದ ಪಿಎಚ್ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ಪ್ರವಾಸಿ ವೀಸಾದ ಮೂಲಕ ಕತಾರ್ಗೆ ತೆರಳಿರುವುದು ಗೊತ್ತಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿರುವ ಚೈತ್ರಾ ಹೆಬ್ಬಾರ್ ನನಗೆ ಪ್ರೀತಿಸೋ ಹಕ್ಕಿಲ್ಕವೇ, ಅಲ್ಲದೆ, ನನ್ನ ಇಚ್ಛೆಯಂತೆ ನಾನು ಬಂದಿದ್ದೇನೆ, ನನಗೆ ಬದುಕೋ ಹಕ್ಕಿಲ್ಲವೇ? ಎಂದು ಪ್ರಶ್ನಿಸಿದ್ದಾಳೆ.
|
3 |
+
ಕಳೆದ ಫೆಬ್ರವರಿ 17 ರಂದು ಪಿಜಿಯಿಂದ ಬೆಳಗ್ಗೆ 9 ಗಂಟೆಗೆ ಸ್ಕೂಟಿಯಲ್ಲಿ ತೆರಳಿದ ಆಕೆ ನಾಪತ್ತೆಯಾಗಿದ್ದಳು. ಆಕೆಯ ದೊಡ್ಡಪ್ಪ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ವೇಳೆ ಚೈತ್ರಾಳ ಸ್ಕೂಟಿ ಸುರತ್ಕಲ್ ಬಳಿ ಪತ್ತೆಯಾಗಿತ್ತು. ಸುರತ್ಕಲ್ನಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿರುವುದು ಗೊತ್ತಾಗಿತ್ತು. ಪಿಜಿ ಬಳಿ ಬರುತ್ತಿದ್ದ ಪುತ್ತೂರಿನ ಶಾರೂಖ್ ಮೇಲೆ ದೂರು ದಾಖಲಾಗಿತ್ತು ಆತನ ಪತ್ತೆಗೆ ಮುಂದಾದ ಪೊಲೀಸರರಿಗೆ ಆತ ಹಿಮಾಚಲ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದ ವಿಚಾರಣೆ ವೇಳೆ ಚೈತ್ರಾ- ಶಾರೂಖ್ ನಡುವಿನ ಪ್ರೀತಿ ವಿಚಾರ ಪೊಲೀಸರಿಗೆ ತಿಳಿದುಬಂದಿದೆ.
|
4 |
+
ಮಂಗಳೂರಿನಿಂದ ಬೆಂಗಳೂರು ನಂತರ ಗೋವಾ-ಮುಂಬೈ ಮಾರ್ಗವಾಗಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಚೈತ್ರಾ, ಅಲ್ಲಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕತಾರ್ ದೇಶಕ್ಕೆ ಪ್ರಯಾಣ ಮಾಡಿದ್ದಾಳೆ. ಆ ದೇಶಕ್ಕೆ ಹೋಗಲು ಶಾರೂಖ್ ಎಲ್ಲಾ ವ್ಯವಸ್ಥೆ ಮಾಡಿದ್ದನು ಎಂದು ತಿಳಿದುಬಂದಿದೆ. ಈ ಹಿಂದೆ ಕತಾರ್ನಲ್ಲೇ ಕೆಲಸ ಮಾಡಿಕೊಂಡಿದ್ದ ಶಾರೂಖ್, ಪ್ರಕರಣವೊಂದರಲ್ಲಿ ಜೈಲು ಸೇರಿ ಕಾರಣ ಆತ ಯುಐಇ ಪ್ರವೇಶ ನಿರ್ಬಂಧಿಸಲಾಗಿದ್ದ ಕಾರಣ ಆತ ಇಲ್ಲೇ ಉಳಿದಿದ್ದ.
|
5 |
+
ಸದ್ಯ ಚೈತ್ರಾ ಕತಾರ್ನ ಭಾರತೀಯ ರಾಯಭಾರಿ ಕಚೇರಿ ಮೂಲಕ ಇಮೇಲ್ ಸಂದೇಶ ರವಾನಿಸಿದ್ದು, ಮೂರು ತಿಂಗಳು ಕಳೆದು ಊರಿಗೆ ಬರೋದಾಗಿ ಹೇಳಿದ್ದಾಳೆ. ಹೀಗಾಗಿ ಶಾರೂಖ್ನನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಇಬ್ಬರೂ ಪ್ರಬುದ್ದರಾಗಿರುವ ಕಾರಣ ಪೊಲೀಸರು ಅಸಹಾಯಕರಾಗಿದ್ದಾರೆ. ಡ್ರಗ್ಸ್ ನ ಆಸೆ ಆಮೀಷ ತೋರಿಸಿ ಬ್ರೈನ್ ವಾಶ್ ಮಾಡಿದ್ದಾನೆ. ಇದು ಲವ್ ಜಿಹಾದ್ ದೊಡ್ಡ ಷಡ್ಯಂತ್ರ ಎಂದು ಬಜರಂಗದಳ ಆರೋಪಿಸಿದೆ.
|
eesanje/url_46_216_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯ ಹಲವರಿಗೆ ಟಿಕೆಟ್ ಕೈ ತಪ್ಪುವ ಭೀತಿ
|
2 |
+
ಬೆಂಗಳೂರು,ಮಾ.3- ವಿಧಾನಸಭಾ ಚುನಾವಣೆಯಲ್ಲಿ ಸೋತು ಲೋಕಸಭಾ ಚುನಾವಣೆಯಲ್ಲಿ ಮರು ರಾಜಕೀಯ ಪ್ರವೇಶ ಪಡೆಯಲು ಮುಂದಾಗಿದ್ದ ಬಿಜೆಪಿಯ ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ತಮ್ಮ ಪುತ್ರರು, ಕುಟುಂಬದವರು, ಸಂಬಂಧಿಕರು ಹಾಗೂ ಕೊನೆ ಕ್ಷಣದಲ್ಲಿ ತಾವೇ ಅಭ್ಯರ್ಥಿಯಾಗಬೇಕೆಂದು ಕಳೆದ ಹಲವು ದಿನಗಳಿಂದ ಕ್ಷೇತ್ರದಲ್ಲಿ ತೆರೆಮರೆಯಲ್ಲಿ ಪ್ರಚಾರ ನಡೆಸಿದ್ದ ಹಲವು ಆಕಾಂಕ್ಷಿಗಳಿಗೆಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.
|
3 |
+
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಸ ಪ್ರಯೋಗ ನಡೆಸಿ ಕೈ ಸುಟ್ಟುಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಬಿಜೆಪಿ ವರಿಷ್ಠರು ಈ ಬಾರಿ ಅಂತಹ ಯಾವುದೇ ದುಸ್ಸಾಹಸಕ್ಕೆ ಕೈ ಹಾಕದಿರಲು ಮುಂದಾಗಿದ್ದಾರೆ. ಮಧ್ಯ ಕರ್ನಾಟಕದ ರಾಜಧಾನಿ ದಾವಣಗೆರೆಯಲ್ಲಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್ರಿಗೆ ಟಿಕೆಟ್ ನೀಡಬಾರದೆಂದು ಜಿಲ್ಲಾ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಕ್ಷೇತ್ರದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ, ಜಗಳೂರು ಕ್ಷೇತ್ರದ ಶಾಸಕ ಡಾ.ಗುರುಸಿದ್ದನಗೌಡರ್ ಪುತ್ರ ಡಾ.ರವಿ ಸೇರಿದಂತೆ ಹಲವರು ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು.
|
4 |
+
ಇದೀಗ ಬಿಜೆಪಿ ಸಿದ್ದೇಶ್ರಿಗೆ ಕೈ ತಪ್ಪಿದರೆ ಜಿಲ್ಲೆಯಲ್ಲಿ ಪ್ರಬಲವಾಗಿರುವ ಸಾಧು ಲಿಂಗಾಯತ ಸಮುದಾಯ ಕೈಕೊಡಬಹುದು ಎಂಬ ಭೀತಿಯಿಂದ ವಿಧಿಯಿಲ್ಲದೆ ಸಿದ್ದೇಶ್ರಿಗೆ ಮಣೆ ಹಾಕುವ ಸಂಭವ ಎದುರಾಗಿದೆ. ಹೀಗಾಗಿ ರೇಣುಕಾಚಾರ್ಯರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ. ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ಗೆ ಟಿಕೆಟ್ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ನಡೆಸಿದ ಪ್ರಯತ್ನ ಕೈಗೂಡುವ ಸಾಧ್ಯತೆಗಳು ಕ್ಷೀಣಿಸಿವೆ. ಈ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಣಕ್ಕಿಳಿದರೆ ಕಾಂತೇಶ್ಗೆ ಟಿಕೆಟ್ ಕೈ ತಪ್ಪಲಿದೆ.
|
5 |
+
ಉಡುಪಿ, ಚಿಕ್ಕಮಗಳೂರು ಕ್ಷೇತ್ರದಿಂದ ಸ್ರ್ಪಸಲು ಮಾಜಿ ಸಚಿವರಾದ ಸಿ.ಟಿ.ರವಿ, ಪ್ರಮೋದ್ ಮಧ್ವರಾಜ್, ಜೀವರಾಜ್ ಅವರುಗಳಿಗೂ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಹಾಲಿ ಸಚಿವರಾಗಿರುವ ಶೋಭಾ ಕರಂದ್ಲಾಜೆ ಅವರನ್ನೇ ಮುಂದುವರೆಸಲು ಬಿಜೆಪಿ ತೀರ್ಮಾನಿಸಿದೆ. ಟಿಕೆಟ್ ಕೊಡಬಾರದೆಂದು ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್ ವಿರುದ್ಧ ನಡೆಸಿದ ಅಭಿಯಾನಕ್ಕೂ ಬಿಜೆಪಿ ವರಿಷ್ಠರು ಸೊಪ್ಪು ಹಾಕುವ ಸಾಧ್ಯತೆಗಳು ಕಡಿಮೆ.
|
6 |
+
ಈ ಕ್ಷೇತ್ರದಿಂದ ಮಾಜಿ ಸಚಿವ ನಾಗರಾಜ ಶೆಟ್ಟಿ ಹಾಗೂ ಸಂಘಪರಿವಾರದ ಬ್ರಿಜೇಶ್ ಚೌತಲ ಆಕಾಂಕ್ಷಿಯಾಗಿದ್ದರು. ಆದರೆ ಕಟೀಲ್ಗೆ ಮತ್ತೊಮ್ಮೆ ಅದೃಷ್ಟ ಖುಲಾಯಿಸುವ ಸಾಧ್ಯತೆಗಳು ಹೆಚ್ಚಾಗುತ್ತಿವೆ.ಹಿಂದೂ ಫೈಯರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಅನಂತಕುಮಾರ್ ಹೆಗ್ಡೆಯೇ ಉತ್ತರ ಕನ್ನಡ ಕ್ಷೇತ್ರದಿಂದ ಪುನಃ ಕಣಕ್ಕಿಳಿಯಲಿದ್ದಾರೆ. ಒಂದು ವೇಳೆ ಹೆಗ್ಡೆಗೆ ಕೈ ತಪ್ಪಿದ್ದ���ೆ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ ಪ್ರಬಲ ಆಕಾಂಕ್ಷಿಯಾಗಿದ್ದರು.
|
7 |
+
ತುಮಕೂರಿನಲ್ಲಿ ಹಾಲಿ ಸದಸ್ಯ ಬಸವರಾಜು ಸ್ಪರ್ಧೆಯಿಂದ ಹಿಂದೆ ಸರಿದಿರುವ ಕಾರಣ ಮಾಜಿ ಸಚಿವರಾದ ಜಿ.ಟಿ.ಮಾಧುಸ್ವಾಮಿ ಮತ್ತು ವಿ.ಸೋಮಣ್ಣ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದವು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಚಾಮರಾಜನಗರ ಮತ್ತು ವರುಣ ಕ್ಷೇತ್ರಕ್ಕೆ ಹೋಗಿ ಸೋಲು ಅನುಭವಿಸಿದ್ದ ವಿ.ಸೋಮಣ್ಣಗೆ ಟಿಕೆಟ್ ಬಹುತೇಕ ಪಕ್ಕಾ ಖಾತರಿಯಾಗಿದೆ. ಇದರಿಂದಾಗಿ ಮಾಧುಸ್ವಾಮಿಗೆ ತೀರಾ ನಿರಾಸೆಯಾಗಿದೆ.
|
8 |
+
ಹೀಗೆ ಅನೇಕ ಕ್ಷೇತ್ರಗಳಲ್ಲಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಬಹುತೇಕ ಆಕಾಂಕ್ಷಿಗಳಿಗೆ ಟಿಕೆಟ್ ಸಿಗುವ ಲಕ್ಷಣಗಳು ಕ್ಷೀಣಿಸಿದ್ದು, 2028 ರ ವಿಧಾನಸಭೆ ಚುನಾವಣೆಯವರೆಗೂ ಕಾಯಲೇಬೇಕಾದ ಸಂದಿಗ್ಧ ಸ್ಥಿತಿಗೆ ಸಿಲುಕಿದ್ದಾರೆ.
|
eesanje/url_46_216_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ : ಎನ್ಐಎ, ಎನ್ಎಸ್ಜಿ ತಂಡ ಪರಿಶೀಲನೆ
|
2 |
+
ಬೆಂಗಳೂರು,ಮಾ.3- ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣ ಸವಾಲಾಗಿ ಪರಿಣಮಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾ ಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾವಹಾರಿಕ ವೈಷಮ್ಯ, ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕ ಸಂಘಟನೆಯವರು 2ದುಷ್ಕøತ್ಯ ನಡೆಸಿರುವ ಸಾಧ್ಯತೆ, ಬೆಂಗಳೂರು ಮಹಾನಗರಕ್ಕೆ ಬಂಡವಾಳ ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತವಲ್ಲದ ನಗರ ಎಂಬ ಹಣೆಪಟ್ಟಿ ಕಟ್ಟುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.
|
3 |
+
ಇವಿಷ್ಟೇ ಅಲ್ಲದೆ, ನಾವು ಬೇರೆಬೇರೆ ಆಯಾಮಗಳಲ್ಲೂ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದೇವೆ. ಹೋಟೆಲ್ ಮಾಲಿಕರು 11 ಶಾಖೆಗಳನ್ನು ಮಾಡಿದ್ದು, 12ನೇ ಶಾಖೆ ಪ್ರಾರಂಭ ಮಾಡಲು ಮುಂಗಡ ಕೊಟ್ಟಿದ್ದು, ಉದ್ಯಮದ ವೈಷಮ್ಯವಿರಬಹುದು ಎಂದೂ ಕೂಡ ಇಲ್ಲಿನವರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನೊಳಗೊಂಡಂತೆ ತನಿಖೆ ನಡೆಸುತ್ತಿದ್ದೇವೆ. ಭಯೋತ್ಪಾದಕ ಸಂಘಟನೆಗಳು ಈ ಕೃತ್ಯ ಎಸಗಿರಬಹುದೇ ಎಂಬ ಶಂಕೆ ಹಿನ್ನೆಲೆಯಲ್ಲಿ ಎನ್ಐಎ, ಎನ್ಎಸ್ಜಿ ತಂಡಗಳು ಕೂಡ ಪರಿಶೀಲನೆ ನಡೆಸುತ್ತಿವೆ. ಒಟ್ಟಾರೆ ಪ್ರಕರಣ ಸವಾಲಾಗಿ ಪರಿಣಮಿಸಿದ್ದು, ಎಲ್ಲಾ ರೀತಿಯಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.
|
4 |
+
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಕ್ಯಾಮೆರಾಗಳನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ಘಟನೆ ನಡೆದ ಸಂದರ್ಭದಲ್ಲಿ 26 ಬಸ್ಗಳು ಬಂದು ಹೋಗಿವೆ. ಆ ಬಸ್ಗಳಲ್ಲಿ ಕ್ಯಾಮೆರಾಗಳನ್ನು ಕೂಡ ಪರಿಶೀಲನೆ ಮಾಡಲಾಗಿದ್ದು, ಮಾಸ್ಕ್ ಮತ್ತು ಕ್ಯಾಪ್ ಧರಿಸಿದ ವ್ಯಕ್ತಿ ಪ್ರಯಾಣಿಸಿದ ಬಸ್ಸನ್ನು ಗುರುತಿಸಲಾಗಿದೆ. ಹೆಚ್ಚಿನ ತಾಂತ್ರಿಕ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುವುದಿಲ್ಲ ಎಂದು ಗೃಹ ಸಚಿವರು ತಿಳಿಸಿದರು.
|
5 |
+
ಇದು ಕಡಿಮೆ ತೀವ್ರತೆಯ ಸ್ಪೋಟವಾಗಿದ್ದರಿಂದ ಹೆಚ್ಚು ಅನಾಹುತಗಳು ಸಂಭವಿಸಿಲ್ಲ. ಬೋಲ್ಟ್, ಮೊಳೆಗಳು ಮೇಲ್ಮುಖವಾಗಿ ಬಂದು ಮೇಲೆ ಸಿಡಿದಿವೆ. ಅವು ಅಕ್ಕ ಪಕ್ಕ ಸಿಡಿದಿದ್ದರೆ ಮತ್ತಷ್ಟು ಅನಾಹುತಗಳು ಸಂಭವಿಸುವ ಸಾಧ್ಯತೆಯಿತ್ತು ಎಂದು ಹೇಳಿದರು. ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದಲ್ಲಿ ಬಳಸಿದ ತಾಂತ್ರಿಕತೆಯಂತೆ ಈ ಸ್ಪೋಟದಲ್ಲೂ ಬ್ಯಾಟರಿಯನ್ನು ಬಳಸಲಾಗಿದೆ ಎಂದು ಹೇಳಲಾಗುತ್ತಿದೆ.
|
6 |
+
ಎಲ್ಲವೂ ತನಿಖೆಯ ನಂತರ ತಿಳಿದು ಬರಬೇಕು. ಸುಮ್ಮನೇ ಊಹಾಪೋಹದ ಹೇಳಿಕೆಗಳನ್ನು ನೀಡಲು ಆಗುವುದಿಲ್ಲ. ಈ ಘಟನೆ ಸಂಬಂಧ ಯಾರು, ಏನೇ ಹೇಳಿಕೆ ನೀಡಿದರೂ ಅದು ಅಧಿಕೃತವಾಗುವುದಿಲ್ಲ. ಮುಖ್ಯಮಂತ್ರಿಗಳು ಅಥವಾ ನಾನು, ಗೃಹ ಇಲಾಖೆಯ ಮುಖ್ಯಸ್ಥರು ನೀಡುವ ಹೇಳಿಕೆ ಮಾತ್ರ ಅಧಿಕೃತವಾಗುತ್ತದೆ ಎಂದು ಸ್ಪಷ್ಟಪಡಿಸಿದರು.
|
7 |
+
ಮ್ಯಾಜಿಕ್ ಮಾಡಲು ಆಗಲ್ಲ:ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಂಬಂಧ ಎಫ್ಎಸ್ಎಲ್ ವರದಿ ವಿಳಂಬ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ವಿವರಗಳನ್ನು ತಾಂತ್ರಿಕವಾಗಿ, ಕರಾರುವಕ್ಕಾಗಿ ನೀಡಬೇಕು. ನಿಮಗೆ ಏನು ಬೇಕೋ ಅದನ್ನು ಕೊಡಲಿಕ್ಕೆ ಆಗುವುದಿಲ್ಲ. 6 ಗಂಟೆಯಲ್ಲಿ, 8 ಗಂಟೆಯಲ್ಲಿ, 48 ಗಂಟೆಯಲ್ಲಿ ಕೊಡುತ್ತೇನೆ ಎಂದು ಹೇಳಲು ಆಗುವುದಿಲ್ಲ. ನಾವೇನೂ ಮ್ಯಾಜಿಕ್ ಮಾಡಲು ಬರುವುದಿಲ್ಲ. ಅಲ್ಲಿಂದ ವರದಿ ಬಂದ ನಂತರ ಬಹಿರಂಗಪಡಿಸುವುದಾಗಿ ಹೇಳಿದರು. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.
|
8 |
+
ಇದೊಂದು ಕ್ಷುಲ್ಲಕ ವಿಷಯ. ಇದನ್ನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಚಿವ ಡಾ.ಶರಣ ಪಾಟೀಲ್ ಹೇಳಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಅವರಿಗೆ ಮಾಹಿತಿಯ ಕೊರತೆಯಿದೆ. ಹಾಗಾಗಿ ಅವರು ಆ ರೀತಿ ಹೇಳಿರಬಹುದು. ನಾವು ಕೊಡುವ ಮಾಹಿತಿ ಅಧಿಕೃತವಾಗಿರುತ್ತದೆ ಎಂದು ಹೇಳಿದರು.ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷಗಳು ರಾಜಕೀಯ ಮಾಡದೇ ಸಹಕರಿಸಬೇಕೆಂದು ಮನವಿ ಮಾಡಿದರು.
|
eesanje/url_46_216_6.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಅರ್ಕಾವತಿ ನದಿಯಲ್ಲಿ ವ್ಯಾಪಕ ಕೊಳಚೆ ಕಳೆ
|
2 |
+
ಬೆಂಗಳೂರು, ಮಾ.3- ದೇವನಹಳ್ಳಿಯ ನಂದಿ ಬೆಟ್ಟದಲ್ಲಿ ಹುಟ್ಟಿ ಕಾವೇರಿ ನದಿ ಸೇರುವ ಅರ್ಕಾವತಿ ನದಿಯಲ್ಲಿ ಕೊಳಚೆ ನೀರಿನಲ್ಲಿ ಬೆಳೆಯುವ ಕಳೆ ವ್ಯಾಪಕವಾಗಿದೆ. ನದಿಯ ಉದ್ದಕ್ಕೂ ಕಳೆ ಹರಡಿಕೊಂಡಿದೆ. ದಿನದಿಂದ ದಿನಕ್ಕೆ ಕಳೆಯ ವ್ಯಾಪ್ತಿ ವಿಸ್ತರಣೆಯಾಗುತ್ತಿದ್ದು, ನೀರಿನಲ್ಲಿ ಬೆಳೆಯುವ ತಾವರೆ ಸೇರಿದಂತೆ ಇತರ ಸಸ್ಯಗಳು ಮರೆಯಾಗುತ್ತಿವೆ. ಚರಂಡಿಯಂತಹ ಕೊಳಚೆ ನೀರಿನಲ್ಲಿ ಬೆಳೆಯುವ ಹಯಸಿಂತ್ ಎಂಬ ಕಳೆ ನದಿಯಲ್ಲಿ ಕಂಡುಬರುತ್ತಿದೆ.
|
3 |
+
ಬೆಂಗಳೂರಿಗೆ ಕುಡಿಯುವ ನೀರು ಪೂರೈಸುತ್ತಿದ್ದ ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಕಲುಷಿತಗೊಂಡು ವರ್ಷಗಳೇ ಕಳೆದಿವೆ. ಹೀಗಾಗಿ ಕುಡಿಯುವ ನೀರಿಗೆ ಬಳಕೆಯಾಗುತ್ತಿಲ್ಲ. ಈ ಜಲಾಶಯದಲ್ಲೂ ಕಳೆ ಕಂಡುಬರುತ್ತಿದೆ. ಈ ನೀರು ಮಂಚನಬೆಲೆ ಜಲಾಶಯ ತಲುಪಲಿದೆ. ಮಂಚನಬೆಲೆ ಜಲಾಶಯದಿಂದ ನದಿಗೆ ಅಲ್ಪಪ್ರಮಾಣದಲ್ಲಿ ನೀರು ಬಿಡುವುದರಿಂದ ಯಾವಾಗಲೂ ನೀರು ಇರುತ್ತದೆ.
|
4 |
+
ಇದರಿಂದ ನದಿಯ ಇಕ್ಕೆಲಗಳ ಕೃಷಿಗೆ ಹಾಗೂ ಜನ-ಜಾನುವಾರುಗಳ ಕುಡಿಯುವ ನೀರಿಗೆ ಅನುಕೂಲವಾಗಿತ್ತು. ಇತ್ತೀಚೆ ಕೊಳಚೆ ನೀರಿನಲ್ಲಿ ಬೆಳೆಯುವ ಕಳೆ ವ್ಯಾಪಕವಾಗಿ ಹರಡುಕೊಳ್ಳುತ್ತಿದೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ನೀರಿನ ಬಣ್ಣ ಕೂಡ ಬದಲಾಗಿದೆ. ಕೊಳಚೆ ನೀರಿನಲ್ಲಿ ಬೆಳೆಯುವ ಹಯಸಿಂತ್ ಎಂಬ ಕಳೆಯನ್ನು ರೈತರು ಜೈವಿಕ ಗೊಬ್ಬರ ತಯಾರಿಕೆಗೆ ಬಳಸಬಹುದು ಎನ್ನುತ್ತಾರೆ ಸಸ್ಯಶಾಸ್ತ್ರಜ್ಞರು. ನದಿಯ ಉದ್ದಕ್ಕೂ ಹರಡಿಕೊಂಡಿರುವ ಈ ಕಳೆ ತೆಗೆದು ಪುನರುಜ್ಜೀವನಗೊಳಿಸದಿದ್ದರೆ ಮುಂದೊಂದು ದಿನ ಅರ್ಕಾವತಿ ನದಿಯೂ ವೃಷಭಾವತಿಯಂತೆ ಕಲುಷಿತ ನದಿಯಾಗುವುದನ್ನು ತಳ್ಳಿಹಾಕುವಂತಿಲ್ಲ.
|
eesanje/url_46_216_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಅನ್ನ-ಅಕ್ಷರ-ಸೂರು ಸಿದ್ದರಾಮಯ್ಯ ಆಡಳಿತದ ಪ್ರಮುಖ ಆಧ್ಯತೆಗಳು
|
2 |
+
ಬೆಂಗಳೂರು ಮಾ2: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಳಜಿ ಮತ್ತು ಕನಸಿಗೆ ವಸತಿ ಇಲಾಖೆ ಯಲ್ಲಿ ಕ್ರಾಂತಿಕಾರಕ ತೀರ್ಮಾನ ತೆಗೆದುಕೊಂಡಿದೆ. ರಾಜ್ಯಾ ದ್ಯಂತ ಏಕ ಕಾಲದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿರುವ 36,789 ಮನೆಗಳ ಹಂಚಿಕೆ ಇಂದು ನಡೆಯುತ್ತಿದೆ.
|
3 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಜಮೀರ್ ಅಹಮದ್ ಖಾನ್ ಅವರು ವಸತಿ ಇಲಾಖೆ ಹೊಣೆ ಗಾರಿಕೆ ವಹಿಸಿಕೊಂಡ ನಂತರ ಬಡವರಿಗೆ ಸೂರು ಕಲ್ಪಿಸುವ ವಿಚಾರದಲ್ಲಿ ದಿಟ್ಟ ತೀರ್ಮಾನ ಕೈಗೊಳ್ಳಲಾಗಿದೆ. ವರ್ಷಗಳ ಕಾಲ ಸ್ವಂತ ಮನೆಯ ಬಡವರ ಕನಸು ನನಸಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮನೆಯನ್ನೂ ಬಡವರಿಗೆ ವಿತರಿಸಿಲ್ಲದಿರುವುದನ್ನು ಖಂಡಿಸಿ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಧ್ವನಿ ಎತ್ತಿ ಹೋರಾಟ ನಡೆಸಿದ್ದರು.
|
4 |
+
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಆರಂಭಿಸಲಾದ ವಸತಿ ಯೋಜನೆಯ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಪಾವತಿ ಮಾಡಲು ಸಾಧ್ಯವಾಗದೆ ನೆನೆಗುದಿಗೆ ಬಿದ್ದಿತ್ತು. ಮುಖ್ಯಮಂತ್ರಿಗಳ ಸಲಹೆಯಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ನಿರಂತರ ಪ್ರಯತ್ನ ದಿಂದ ಬಡ ಕುಟುಂಬಗಳು ಪಾವತಿಸಬೇಕಿದ್ದ ಫಲಾನುಭವಿಗಳ ವಂತಿಗೆಯನ್ನು ಸರ್ಕಾರವೇ ಭರಿಸುತ್ತಿದೆ.
|
5 |
+
ಬಡ ಕುಟುಂಬಗಳ ಆರ್ಥಿಕ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳಿಗೆ ವಸ್ತು ಸ್ಥಿತಿ ಮನವರಿಕೆ ಮಾಡಿಕೊಟ್ಟು ಹತ್ತಾರು ಬಾರಿ ಅಧಿಕಾರಿಗಳ ಸಭೆ ನಡೆಸಿಫಲಾನುಭವಿಗಳ ಪಾಲಿನ ವಂತಿಗೆ ಮೊತ್ತ 6170 ಕೋಟಿ ರೂ.ಸಂಪೂರ್ಣ ವಾಗಿ ಸರ್ಕಾರವೇ ಭರಿಸುವ ಮಹತ್ವದ ತೀರ್ಮಾನ ಸಂಪುಟ ಸಭೆ ಕೈಗೊಳ್ಳುವಂತೆ ಮಾಡುವಲ್ಲಿ ಜಮೀರ್ ಅಹಮದ್ ಖಾನ್ ಯಶಸ್ವಿ ಆಗಿದ್ದರ ಫಲವಾಗಿ ಇಂದು ಸುಸೂತ್ರವಾಗಿ ಬಡವರಿಗೆ ಮನರಗಳ ಹಂಚಿಕೆ ಆಗುತ್ತಿದೆ.
|
6 |
+
1,80,253 ಮನೆಗಳ ಕಾಮಗಾರಿ ಪೂರ್ಣ ಗೊಳಿಸಲು ಮೊದಲನೇ ಕಂತು 500 ಕೋಟಿ ರೂ. ಬಿಡುಗಡೆ ಆಗಿದ್ದು ಮೊದಲ ಹಂತದಲ್ಲಿ 36, 789 ಮನೆ ಗಳನ್ನು ಇಂದು ಹಂಚಿಕೆ ಮಾಡಲಾಗುತ್ತಿದೆ.ಕೆ ಆರ್ ಪುರದ ನಗರೇಶ್ವರ ನಾಗೇನಹಳ್ಳಿ ಯಲ್ಲಿ 1047 ಮನೆ ನಿರ್ಮಿಸಿದ್ದು ಇಂದು 480 ಮನೆ ಹಂಚಿಕೆ ಮಾಡಲಾಗುತ್ತಿದೆ. ಇದೇ ರೀತಿ ರಾಜ್ಯಾದ್ಯಂತ ನಿರ್ಮಿಸಿರುವ ಮನೆಗಳನ್ನು ಏಕ ಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಂಚಿಕೆ ಮಾಡಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ತಮ್ಮ ತಮ್ಮ ಕ್ಷೇತ್ರ ದಲ್ಲಿದ್ದು ಕಾರ್ಯಕ್ರಮ ಕ್ಕೆ ಚಾಲನೆ ನೀಡಲಿದ್ದಾರೆ.
|
7 |
+
ಈ ಯೋಜನೆಯಡಿಯಲ್ಲಿ ಫಲಾನುಭವಿಗಳು ತಲಾ 4.50 ಲಕ್ಷ ರೂ. ಪಾವತಿಸಬ���ಕಿತ್ತಾದರೂ ಇದೀಗ 1 ಲಕ್ಷ ರೂ. ಪಾವತಿಸಿದರೆ ಉಳಿದ ಮೊತ್ತ ಸರ್ಕಾರವೇ ಭರಿಸುತ್ತಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಗೆ 7.50 ಲಕ್ಷ ರೂ. ವೆಚ್ಚ ವಾಗಲಿದ್ದು 3 ಲಕ್ಷ ಸಬ್ಸಿಡಿ ಹೊರತು ಪಡಿಸಿದರೆ ಉಳಿದ ಮೊತ್ತ ಫಲಾನುಭವಿ ಕೊಡಬೇಕಿತ್ತು. ಬ್ಯಾಂಕ್ ಸಾಲವೂ ದೊರೆಯದೆ ಅಷ್ಟು ಕುಟುಂಬಗಳು ಸಂಕಷ್ಟ ಎದುರಿಸುತ್ತಿದ್ದವು.ಇದೀಗ ಸರ್ಕಾರ ದ ತೀರ್ಮಾನ ದಿಂದ 1,80,253 ಕುಟುಂಬಗಳಿಗೆ ನೆಮ್ಮದಿ ಸಿಕ್ಕಂತಾಗಿದೆ.
|
8 |
+
ಸಂಕಷ್ಟದಲ್ಲಿದ್ದ ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ತೀರ್ಮಾನ ನಮ್ಮ ಅವಧಿಯಲ್ಲಿ ಕೈಗೊಂಡಿದ್ದು ಸಂತೋಷ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ನಮ್ಮ ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾಳಜಿ, ಹಣಕಾಸು ಇಲಾಖೆ ಅಧಿಕಾರಿಗಳ ಸಹಕಾರ ದಿಂದ ಬಡವರು ಶಾಶ್ವತ ಸೂರು ಪಡೆದಂತಾಗಿದೆ. ಆ ಮೂಲಕ ಮುಖ್ಯಮಂತ್ರಿಗಳ ಕನಸು ಮತ್ತು ಕಾಳಜಿ ಸಾಕಾರಗೊಳ್ಳುತ್ತಿದೆ.
|
eesanje/url_46_216_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಸತಿ ಯೋಜನೆಯ ಜಿಎಸ್ಟಿ ಮನ್ನಾಕ್ಕೆ ಡಿಸಿಎಂ ಒತ್ತಾಯ
|
2 |
+
ಬೆಂಗಳೂರು,ಮಾ.2- ಬಡವರ ಮನೆ ನಿರ್ಮಾಣಕ್ಕೆ ರೂಪಿಸಲಾಗಿರುವ ವಸತಿ ಯೋಜನೆಗಳಿಂದ ಸಂಗ್ರಹಿಸುತ್ತಿರುವ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಸರ್ವರಿಗೂ ಸೂರು ಯೋಜನೆಯಡಿ ಕೆ.ಆರ್.ಪುರಂನ ನಗರೇಶ್ವರ ನಾಗೇನಹಳ್ಳಿಯಲ್ಲಿ ನಿರ್ಮಿಸಿರುವ 33,789 ಮನೆಗಳ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಮನೆ ನಿರ್ಮಾಣಕ್ಕೆ ಒಂದೂವರೆ ಲಕ್ಷ ರೂ.ಗಳ ಅನುದಾನ ನೀಡುವ ಕೇಂದ್ರಸರ್ಕಾರ ಜಿಎಸ್ಟಿ ರೂಪದಲ್ಲಿ 1.26 ಲಕ್ಷ ರೂ.ಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು.
|
3 |
+
ವೇದಿಕೆಯಲ್ಲಿದ್ದ ಬಿಜೆಪಿಯ ಶಾಸಕ ಭೈರತಿ ಬಸವರಾಜು ಅವರತ್ತ ತಿರುಗಿದ ಡಿ.ಕೆ.ಶಿವಕುಮಾರ್, ಈ ರೀತಿಯ ಅವೈಜ್ಞಾನಿಕ ಜಿಎಸ್ಟಿಯನ್ನು ಅದರಲ್ಲೂ ಬಡವರ ಯೋಜನೆಯಲ್ಲಿನ ಹಣವನ್ನು ಕಸಿದುಕೊಳ್ಳುವ ತೆರಿಗೆ ಪದ್ಧತಿಯನ್ನು ಕಡಿತ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ಎಂದು ಸಲಹೆ ನೀಡಿದರು. ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಯನ್ನು ಸಮರ್ಥವಾಗಿ ಜಾರಿಗೆ ತರುತ್ತಿದೆ. ಎಲ್ಲಾ ಸೌಲಭ್ಯ ಗಳೂ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿವೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಜನ ಜೈಕಾರಗಳ ಮೂಲಕ ಸ್ಪಂದಿಸಿದರು.
|
4 |
+
ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದರು. ಈಗ ಅವರೇ ನಮ್ಮ ಗ್ಯಾರಂಟಿಗಳನ್ನು ಕದ್ದು ಮೋದಿ ಗ್ಯಾರಂಟಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದು ಬಿಜೆಪಿ ಗ್ಯಾರಂಟಿಯಲ್ಲ, ಮೋದಿ ಗ್ಯಾರಂಟಿ ಎಂದು ಬಿಂಬಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು.
|
5 |
+
ಈ ವೇಳೆ ವೇದಿಕೆಯಲ್ಲಿ ಒಬ್ಬರು ಡೂಪ್ಲಿಕೇಟ್ ಗ್ಯಾರಂಟಿ ಎಂದು ಹೇಳಿದಾಗ, ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಫಲಾನುಭವಿಗಳ ಸಮಾವೇಶದಲ್ಲಿ ರಾಜ್ಯಸರ್ಕಾರದ ಗ್ಯಾರಂಟಿಗಳು ಜನರ ಬದುಕನ್ನು ಸುಧಾರಣೆ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಜ್ಞಾನಿ ಅರಗ ಜ್ಞಾನೇಂದ್ರ ಇದನ್ನು ಡೂಪ್ಲಿಕೇಟ್ ಗ್ಯಾರಂಟಿ ಎಂದು ಟೀಕಿಸಿರುವುದನ್ನೂ ಗಮನಿಸಿದ್ದೇನೆ ಎಂದರು.
|
6 |
+
ಟೀಕೆ ಮಾಡುವ ಬಿಜೆಪಿಯವರು ತಮ್ಮ ಪಕ್ಷದ ಮಹಿಳಾ ಕಾರ್ಯಕರ್ತರಿಗೆ ಗೃಹಲಕ್ಷ್ಮಿಯ 2 ಸಾವಿರ ರೂ.ಗಳನ್ನು ತೆಗೆದುಕೊಳ್ಳಬೇಡಿ, ಶಕ್ತಿ ಯೋಜನೆಯ ಸೌಲಭ್ಯ ಪಡೆಯದೆ ದುಡ್ಡು ಕೊಟ್ಟು ಬಸ್ನಲ್ಲಿ ಓಡಾಡಲು ಹೇಳಿ ಎಂದು ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು. ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ಟೀಕೆ ಮಾಡುತ್ತಿದ್ದಾರೆ. ಮತ್ತೊಂದೆಡೆ ನಮ್ಮದೇ ಯೋಜನೆಗಳನ್ನು ಕದ್ದು ಪ್ರಚಾರ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
eesanje/url_46_216_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕೃಷಿ ಇಲಾಖೆಯಲ್ಲಿ 750 ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಚೆಲುವರಾಯಸ್ವಾಮಿ
|
2 |
+
ಬೆಂಗಳೂರು,ಮಾ.2- ಕೃಷಿ ಇಲಾಖೆಯಲ್ಲಿ ಖಾಲಿ ಇರುವ 100 ಕೃಷಿ ಅಧಿಕಾರಿಗಳು, 680 ಸಹಾಯಕ ಕೃಷಿ ಅಧಿಕಾರಿಗಳು ಸೇರಿದಂತೆ 750 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 10 ತಿಂಗಳ ಅವಧಿಯಲ್ಲಿ ಮಾಡಿರುವ ಸಾಧನೆಗಳ ಕುರಿತು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು.
|
3 |
+
ಆರ್ಥಿಕ ಇಲಾಖೆ ಈ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಿದ್ದು ಇನ್ನು ಒಂದು ವಾರದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಲೋಕಸೇವಾ ಆಯೋಗಕ್ಕೆ ಕಳುಹಿಸಲಾಗುವುದು. ಮೊದಲ ಹಂತದಲ್ಲಿ ಈ ಹುದ್ದೆಗಳ ನೇಮಕಾತಿ ಆಗುತ್ತಿದ್ದು, ಇನ್ನೆರಡುಮೂರು ವರ್ಷದಲ್ಲಿ ಖಾಲಿ ಇರುವ ಸುಮಾರು 2700 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸುಮಾರು 20 ವರ್ಷದಿಂದ ಬಾಕಿ ಉಳಿದಿದ್ದ ಮುಂಬಡ್ತಿಯನ್ನು ನೀಡಲಾಗಿದೆ. 292 ಸಹಾಯಕ ಕೃಷಿ ನಿರ್ದೇಶಕರು, 253 ಕೃಷಿ ಅಧಿಕಾರಿಗಳು, 33 ಸಿಬ್ಬಂದಿ ಸೇರಿದಂತೆ ಒಟ್ಟು 582 ಮಂದಿಗೆ ಮುಂಬಡ್ತಿ ನೀಡಲಾಗಿದೆ ಎಂದು ಹೇಳಿದರು.
|
4 |
+
ಐದು ವರ್ಷದಿಂದ ನಿಲ್ಲಿಸಲಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಆರಂಭಿಸಲಾಗಿದ್ದು, 10 ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸಲಾಗುತ್ತಿದೆ. ಕೃಷಿ ಯಾಂತ್ರಿಕತೆಯಲ್ಲಿ ಪ್ರೋತ್ಸಾಹ ನೀಡಲು 63 ಸಾವಿರ ಫಲಾನುಭವಿಗಳಿಗೆ 284.92 ಕೋಟಿ ರೂ. ಸಹಾಯಧನ ನೀಡಲಾಗಿದೆ. 2.34 ಲಕ್ಷ ಫಲಾನುಭವಿಗಳಿಗೆ ಸೂಕ್ಷ್ಮ ನೀರಾವರಿ ಘಟಕ ಅಳವಡಿಕೆ 484 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದು ತಿಳಿಸಿದರು. ರೈತ ಕರೆ ಕೇಂದ್ರದಲ್ಲಿ ಏಕರೂಪ ಸಂಖ್ಯೆಯನ್ನು ಸ್ಥಾಪಿಸಲಾಗಿದೆ. ತೊಗರಿ ಬೇಳೆಯ ನಶೆರೋಗಕ್ಕೆ ಪರಿಹಾರವಾಗಿ 2.98 ಲಕ್ಷ ರೈತರಿಗೆ 223 ಕೋಟಿ ರೂ. ಪರಿಹಾರ ನೀಡಿದ್ದು, ಕೆ-ಕಿಸಾನ್ ತಂತ್ರಾಂಶದಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗಿದ್ದು, ನಕಲಿ ಆಗುವುದನ್ನು ತಪ್ಪಿಸಲಾಗಿದೆ ಎಂದು ಹೇಳಿದರು.ಈ ವರ್ಷ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿಚಾರದಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ಮುಂದಿನ ವರ್ಷವೂ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
|
5 |
+
ಉತ್ತಮ ಮಳೆ: ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹೆಚ್ಚುವರಿ 297 ಕೋಟಿ ರೂ. ಅನುದಾನವನ್ನು ಪಡೆಯಲಾಗಿದೆ ಎಂದು ತಿಳಿಸಿದರು.
|
6 |
+
ಹಿಂಗಾರು ಮತ್ತು ಮುಂಗಾರು ಹಂಗಾಮಿನಲ್ಲಿ 25 ಲಕ್ಷ ರೈತರು ಬೆಳೆವಿಮೆ ನೋಂದಣಿ ಮಾಡಿಸಿದ್ದು, ಈಗಾಗಲೇ 600 ಕೋಟಿ ರೂ. ಪಾವತಿಸಲಾಗಿದೆ. ಮಾರ್ಚ್ ಅಂತ್ಯಕ್ಕೆ 800 ಕೋಟಿ ರೂ. ಪಾವತಿಸಲಿದ್ದು, ಒಟ್ಟು 1400 ಕೋಟಿ ರೂ. ಬೆಳೆ ವಿಮೆ ಪಾವತಿ ಮಾಡಿದಂತಾಗಿದೆ. ಕೇಂದ್ರ ಸರ್ಕಾರ ಭರ ಪರಿಹಾರ ನೀಡುವಲ್ಲಿ ಉದಾಸ��ನ ಮಾಡಿದ್ದರೂ ರಾಜ್ಯ ಸರ್ಕಾರ 2000 ರೂ. ಪರಿಹಾರ ನೀಡುತ್ತಿದೆ ಎಂದು ಹೇಳಿದರು.
|
7 |
+
ಜಲಾನಯನ ಅಭಿವೃದ್ಧಿ ಇಲಾಖೆಯಲ್ಲೂ 73.77 ಲಕ್ಷ ಹೆಕ್ಟೇರ್ ಪ್ರದೇಶಗಳನ್ನು ಉಪಚರಿಸಲಾಗಿದೆ. ಮನ್ರೇಗಾ ಸೇರಿದಂತೆ 881.16 ಕೋಟಿ ರೂ. ಕಾರ್ಯಕ್ರಮ, 9398 ನೀರು ಸಂಗ್ರಹಣ ವಿನ್ಯಾಸ 1,07,059 ಸುಧಾರಣೆ ಮಾಡಲಾಗಿದೆ. 585.90 ಕೋಟಿ ರೂ. ವೆಚ್ಚವಾಗಿದೆ ಎಂದು ಅಂಕಿ ಅಂಶಗಳ ಸಾಧನೆಯ ಮಾಹಿತಿ ನೀಡಿದರು.ಗೋಷ್ಠಿಯಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತ ವೈ.ಎಸ್.ಪಾಟೀಲ್, ನಿರ್ದೇಶಕ ಡಾ.ಪುತ್ರ, ಜಲಾನಯನ ಅಭಿವೃದ್ಧಿ ಆಯುಕ್ತ ಗಿರೀಶ್, ನಿರ್ದೇಶಕ ಶ್ರೀನಿವಾಸ್, ಕೆಫೆಕ್ ವ್ಯವಸ್ಥಾಪಕ ನಿರ್ದೇಶಕ ಪಂಥನಾಳ್ ಉಪಸ್ಥಿತರಿದ್ದರು.
|
eesanje/url_46_217_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಕಿಂಗ್ಪಿನ್ ನಯಾಜಿ ಸೆರೆ
|
2 |
+
ಬೆಂಗಳೂರು,ಮಾ.2- ಕಳೆದ 2016ರಲ್ಲಿ ನಡೆದಿದ್ದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಜಿಯನ್ನು 8 ವರ್ಷಗಳ ನಂತರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ. ಮೂಲತಃ ಭಯೋತ್ಪಾದಕ ಸಂಘಟನೆಯೊಂದರ ಜೊತೆ ಗುರುತಿಸಿಕೊಂಡಿದ್ದ ಮೊಹಮ್ಮದ್ ಗೌಸ್ ನಯಾಜಿ ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ. ಇದರ ಬಗ್ಗೆ ಖಚಿತ ಸುಳಿವು ಹಿಡಿದ ಎನ್ಐಎ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
|
3 |
+
2016ರ ಅ.16ರಂದು ಬೆಳಗ್ಗೆ 9ಕ್ಕೆ ಶಿವಾಜಿನಗರದ ಕಾಮರಾಜ ರಸ್ತೆಯ ಶ್ರೀನಿವಾಸ ಮೆಡಿಕಲ್ ಸ್ಟೋರ್ ಮುಂಭಾಗ ಸ್ನೇಹಿತರೊಂದಿಗೆ ನಿಂತಿದ್ದ ರುದ್ರೇಶ್ ಅವರನ್ನು 2 ಬೈಕ್ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎನ್ಐಎ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿ ಆರ್ಟಿನಗರ ಎರಡನೇ ಬ್ಲಾಕ್ನ ನಿವಾಸಿ ಮೊಹಮ್ಮದ್ ಗೌಸ್ ನಯಾಝಿ ಅಲಿಯಾಸ್ ಗೌಸ್ ಭಾಯ್ ಎಂಬಾತನಿಗೆ ಶೋಧ ನಡೆಸುತ್ತಿತ್ತು.
|
4 |
+
ಪ್ರಕರಣದಲ್ಲಿ ಶಾಮೀಲಾಗಿದ್ದರು ಎನ್ನಲಾದ ಆರೋಪಿಗಳೆಲ್ಲರೂ ಜೈಲಿನಲ್ಲಿದ್ದಾರೆ. ಆದರೆ ಮೊಹಮ್ಮದ್ ಗೌಸ್ ತಲೆಮರೆಸಿಕೊಂಡಿದ್ದು, ಆತನ ಸುಳಿವೂ ಸಿಕ್ಕಿರಲಿಲ್ಲ. ಆದ್ದರಿಂದ ಮೊಹಮ್ಮದ್ ಗೌಸ್ ನಯಾಝಿ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿತ್ತು. ಜೊತೆಗೆ ಆತನ ಸುಳಿವು ಸಿಕ್ಕಿದರೆ ಎನ್ಐಎ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯಲ್ಲಿ ಬಂಧಿತರಾಗಿದ್ದ ಒಂದನೇ ಆರೋಪಿ ಇರ್ಫಾನ್ ಪಾಷಾ ಹಾಗೂ ನಾಲ್ಕನೇ ಆರೋಪಿ ಮೊಹಮ್ಮದ್ ಮುಜೀಬ್ ಉಲ್ಲಾ ಅರ್ಜಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
|
5 |
+
ವಿಚಾರಣೆಯನ್ನು ಎನ್ಐಎ ವಿಶೇಷ ನ್ಯಾಯಲಯದ ನ್ಯಾಯಾೀಧಿಶ ಡಾ. ಕಸನಪ್ಪ ನಾಯಕ್ ಕೈಗೆತ್ತಿಕೊಂಡಿದ್ದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಯಾರೋ ಅಪರಿಚಿತ ದುಷ್ಕರ್ಮಿಗಳು ಮೋಟರ್ ಬೈಕ್ನಲ್ಲಿ ಬಂದು ರುದ್ರೇಶ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಆದರೆ ಪ್ರಕರಣಕ್ಕೆ ಯಾವುದೇ ಸಂಬಂಧ, ಆಧಾರವಿಲ್ಲದಿದ್ದರೂ ಅರ್ಜಿದಾರರನ್ನು ಎನ್ಐಎ ಅಧಿಕಾರಿಗಳು 2016ರ ಅಕ್ಟೋಬರ್ 27ರಂದು ಬಂಧಿಸಿದ್ದಾರೆ. ಅಧಿಕಾರಿಗಳು ಆರೋಪಿಸಿರುವಂತೆ ಅವರು ಪಿಎಫ್ಐ ಸದಸ್ಯರೂ ಅಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಕೋರಿದ್ದರು.
|
6 |
+
ಎನ್ಐಎ ಪರ ವಾದ ಮಂಡಿಸಿದ್ದ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್, ಆರೋಪಿಗಳು ಆರ್ಎಸ್ಎಸ್ ಪಥಸಂಚಲನದ ವೇಳೆ ಕನಿಷ್ಠ ಇಬ್ಬರು ಕಾರ್ಯಕರ್ತರನ್ನು ಕೊಲ್ಲುವ ಉದ್ದೇಶದೊಂದಿಗೆ ಸ��ಕಷ್ಟು ಸಭೆ ನಡೆಸಿದ್ದರು. ಅದರಂತೆ ಪೂರ್ವಯೋಜಿತ ತಯಾರಿ ಮಾಡಿ ಕಾರ್ಯಕರ್ತ ರುದ್ರೇಶ್ನನ್ನು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಎನ್ಐಎ ಎಲ್ಲ ಸಾಂದರ್ಭಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಅಲ್ಲದೇ, ಆರೋಪಿಗಳಿಗೆ ಈ ಹಿಂದೆಯೂ ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ಜಾಮೀನು ನಿರಾಕರಿಸಿವೆ. ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷ್ಯಾಧಾರಗಳಿದ್ದು ಅವರಿಗೆ ಜಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು. ಹೀಗಾಗಿ ನ್ಯಾಯಾಲಯ ವಾದ ಪ್ರತಿವಾದ ಆಲಿಸಿ ಎನ್ಐಎ ಪರ ವಿಶೇಷ ಅಭಿಯೋಜಕರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನನ್ನು ನಿರಾಕರಿಸಿತ್ತು.
|
eesanje/url_46_217_10.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಆರ್ಟಿಓ ಕಾಮಗಾರಿ ಕ್ರಿಯಾ ಯೋಜನೆಗೆ ಅಸ್ತು
|
2 |
+
ಬೆಂಗಳೂರು,ಮಾ.2- ಸಾರಿಗೆ ಇಲಾಖೆಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಕಟ್ಟಡಗಳು ಮತ್ತು ವಾಹನ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ 20 ಕೋಟಿ ರೂ.ಗಳ ಪರಿಷ್ಕøತ ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ.
|
3 |
+
2023-24 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಆರ್ಟಿಓ ಕಟ್ಟಡಗಳು ಮತ್ತು ವಾಹನ ಚಾಲನೆ ಪರೀಕ್ಷಾ ದಾರಿಗಳು 386 ನಿರ್ಮಾಣದ ಅಡಿಯಲ್ಲಿ ಸಾರಿಗೆ ಇಲಾಖೆಗೆ 20 ಕೋಟಿ ರೂ. ಅನುದಾನ ಒದಗಿಸಲಾಗಿದೆ.ವಿಜಯಪುರ, ಕೊಪ್ಪಳ, ಶಿರಸಿ, ಬೀದರ್, ಕಲಬುರಗಿ, ದಾಂಡೇಲಿ, ಭಾಲ್ಕಿ, ಚಿಂತಾಮಣಿ, ಬೆಳಗಾವಿ, ಯಾದಗಿರಿ, ಚಂಚಾಪುರ, ಕೆಜಿಎಫ್, ಮಧುಗಿರಿ, ಗೋಕಾಕ್, ರಾಣೆಬೆನ್ನೂರು ಆರ್ಟಿಓ ಕಚೇರಿಗಳ ಒಳವಿನ್ಯಾಸ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
|
4 |
+
ಕ್ರಿಯಾಯೋಜನೆ ಅನ್ವಯ ಮಾತ್ರ ಅನುಮೋದಿತ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು. ಕರ್ನಾಟಕ ಪಾರದರ್ಶಕ ಕಾಯ್ದೆಯನ್ವಯ ಕಡ್ಡಾಯ ಕಾಮಗಾರಿಗಳನ್ನು ಕೈಗೊಳ್ಳಬೇಕು. ಬಿಡುಗಡೆಯಾದ ಅನುದಾನವನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆ ಇಲ್ಲದೆ ಬೇರೆ ಕಾಮಗಾರಿಗೆ ಬಳಸುವಂತಿಲ್ಲ. ಅನುದಾನವನ್ನು ಕಾಮಗಾರಿಗಳ ಟೆಂಡರ್ ಮೊತ್ತಕ್ಕೆ ಅನುಗುಣವಾಗಿ ಬಿಡುಗಡೆ ಮಾಡುವ ಷರತ್ತನ್ನು ವಿಧಿಸಲಾಗಿದೆ.
|
eesanje/url_46_217_11.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
28 ದಿನಗಳಲ್ಲಿ ಮಾದಪ್ಪನ ಹುಂಡಿಯಲ್ಲಿ 1.82 ಕೋಟಿ ರೂ. ಕಾಣಿಕೆ ಸಂಗ್ರಹ
|
2 |
+
ಹನೂರು, ಮಾ.2- ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಮಲೈ ಮಹದೇಶ್ವರಸ್ವಾಮಿ ಹುಂಡಿಯಲ್ಲಿ 28 ದಿನಗಳಲ್ಲಿ 1.82 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಾಲೂರು ಬೃಹನ್ಮಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಕಾರ್ಯದರ್ಶಿ ರಘು ಎ.ಈ.ಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
|
3 |
+
28 ದಿನಗಳಲ್ಲಿ 1.82 ಕೋಟಿ ರೂ. ನಗದು, 41 ಗ್ರಾಂ. ಚಿನ್ನ ಹಾಗೂ 1.200 ಕೆಜಿ ಬೆಳ್ಳಿ ಸಂಗ್ರಹವಾಗಿದೆ.ಅಲ್ಲದೆ, 2000ರೂ. ನೋಟುಗಳು 14 ಹಾಗೂ ಐದು ಪೌಂಡ್ಸ್ ಒಂದು ನೋಟು, ಐದು ಡಾಲರ್ಸ್ನ ಮೂರು ವಿದೇಶಿ ನೋಟುಗಳು ಸಂಗ್ರಹವಾಗಿವೆ. ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಮತ್ತು ಮ.ಬೆಟ್ಟ ಪೊಲೀಸರ ಬಂದೋಬಸ್ತ್ ನಲ್ಲಿ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಹುಂಡಿ ಹಣ ಎಣಿಕೆ ಕಾರ್ಯ ತಡರಾತ್ರಿ 8ರ ವರೆಗೂ ನಡೆಯಿತು.
|
4 |
+
ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು ಎ.ಈ. ಉಪ ಕಾರ್ಯದರ್ಶಿ ಚಂದ್ರಶೇಖರ ಜಿ.ಎಲ್., ಹಣಕಾಸು ಲೆಕ್ಕ ಪತ್ರ ಸಲಹೆಗಾರ ನಾಗೇಶ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬ್ಯಾಂಕ್ ಅಫ್ ಬರೋಡಾ ವ್ಯವಸ್ಥಾಪಕರು ಈ ಸಂದರ್ಭದಲ್ಲಿದ್ದರು.
|
eesanje/url_46_217_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಯುವಕನ ಅಪಹರಿಸಿ ಸುಲಿಗೆ ಮಾಡಿ ಕೊಲೆಗೆ ಯತ್ನಿಸಿದ್ದ ರೌಡಿಗಳ ಸೆರೆ
|
2 |
+
ಬೆಂಗಳೂರು, ಮಾ.3- ಹಣಕ್ಕಾಗಿ ಯುವಕನನ್ನು ಕಾರಿನಲ್ಲಿ ಅಪಹರಿಸಿ ಸುಲಿಗೆ ಮಾಡಿ ನಂತರ ಕೊಲೆಗೆ ಯತ್ನಿಸಿದ್ದ ಕುಖ್ಯಾತ ರೌಡಿ ಸೇರಿದಂತೆ ನಾಲ್ವರು ರೌಡಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಸಕೆರೆಹಳ್ಳಿ ಕೇಕ್ ಆಫ್ ದಿ ಡೇ ಅಂಗಡಿಯ ಹತ್ತಿರದಿಂದ ಓರ್ವ ಯುವಕನನ್ನು ಹಣಕ್ಕಾಗಿ ಕಾರಿನಲ್ಲಿ ರೌಡಿಗಳು ಅಪಹರಣ ಮಾಡಿ, ನಂತರ ಆತನ ಮೊಬೈಲ್ ಮತ್ತು ನಗದು ಹಣವನ್ನು ಸುಲಿಗೆ ಮಾಡಿದ್ದರು.ತದನಂತರ ಅಪಹರಣಗೊಂಡ ಯುವಕನ ಸ್ನೇಹಿತನಿಗೆ ಮೊಬೈಲ್ ಕರೆ ಮಾಡಿ 3 ಲಕ್ಷ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಈ ಬಗ್ಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
|
3 |
+
ಅಪಹರಣಕಾರರನ್ನು ಪತ್ತೆ ಹಚ್ಚಲು ಸಿಸಿಬಿ ಪೊಲೀಸರು ಒಂದು ತಂಡವನ್ನು ರಚಿಸಿದ್ದರು. ಈ ತಂಡವು ವಿವಿಧ ಆಯಾಮಗಳಲ್ಲಿ ಕಾರ್ಯಾಚರಣೆ ಕೈಗೊಂಡು ಅಪಹರಣಗೊಂಡಿದ್ದ ವ್ಯಕ್ತಿಯನ್ನು ರಕ್ಷಿಸಿ ನಾಲ್ವರು ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಪಹರಣ ಮಾಡಿದ ನಾಲ್ವರ ಪೈಕಿ ಒಬ್ಬ ಚನ್ನಮ್ಮನಕೆರೆ ಅಚ್ಚುಕಟ್ಟು, ಚಾಮರಾಜಪೇಟೆ ಮತ್ತು ಸುಬ್ರಮಣ್ಯಪುರ ಪೊಲೀಸ್ ಠಾಣೆಗಳಲ್ಲಿ ರೌಡಿ ಹಾಳೆಯನ್ನು ಹೊಂದಿರುತ್ತಾನೆ.
|
4 |
+
ಈತನ ಇತರೆ ಮೂವರು ಸಹಚರರು ಸಹ ವಿವಿಧ ಪೊಲೀಸ್ ಠಾಣೆಗಳಲ್ಲಿ ರೌಡಿ ಹಾಳೆಯನ್ನು ಹೊಂದಿರುತ್ತಾರೆ.ವಶಕ್ಕೆ ಪಡೆದ ನಾಲ್ವರು ರೌಡಿಗಳನ್ನು ಸುದೀರ್ಘವಾಗಿ ವಿಚಾರಣೆ ಮಾಡಿದಾಗ, 3 ಲಕ್ಷ ಹಣವನ್ನು ಪಡೆದ ನಂತರ ಅಪಹರಣಕ್ಕೊಳಗಾದ ಯುವಕನನ್ನು ಕೊಲೆ ಮಾಡಿ, ಸಾಕ್ಷಿ ನಾಶ ಪಡಿಸುವ ಉದ್ದೇಶವನ್ನು ಹೊಂದಿದ್ದರ ಬಗ್ಗೆ ತಿಳಿದು ಬಂದಿರುತ್ತದೆ. ಈ ಕಾರ್ಯಾಚರಣೆಯನ್ನು ಸಿ.ಸಿ.ಬಿಯ ಸಂಘಟಿತ ಅಪರಾಧ ದಳ (ಪಶ್ಚಿಮ)ದ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
|
5 |
+
ನೈಜೀರಿಯಾ ಪ್ರಜೆಗಳ ಸೆರೆ : 67ಲಕ್ಷ ರೂ.ಮೌಲ್ಯದ ಡ್ರಗ್ಸ್ ಜಪ್ತಿ
|
6 |
+
ಬೆಂಗಳೂರು, ಮಾ.1- ನೈಜೀರಿಯಾ ದೇಶದ ಇಬ್ಬರು ಪ್ರಜೆಗಳನ್ನು ಯಲಹಂಕ ಉಪ ನಗರ ಠಾಣೆ ಪೊಲೀಸರು ಬಂಧಿಸಿ 67.50 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತು ಕೊಕೈನ್ ಮತ್ತು ಎಂಡಿಎಂಎ ಕ್ರಿಸ್ಟೀಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಬ್ಬಂದಿಯವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು ವೀರಸಾಗರ ಗ್ರಾಮ, ಜಾರಕ್ಬಂಡೆ ಕಾವಲು ಮುಖ್ಯ ರಸ್ತೆಯಲ್ಲಿ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ್ದಾರೆ.
|
7 |
+
ಆರೋಪಿಗಳು ನಿಷೇಧಿತ ಮಾದಕ ವಸ್ತುಗಳಾದ ಕೊಕೇನ್ ಮತ್ತು ಎಂಡಿಎಂಎ ಕ್ರಿಸ್ಟೇಲ್ಗಳನ್ನು ಸಾರ್ವಜನಿಕರಿಗೆ ಮತ್ತು ವಿಧ್ಯಾರ್ಥಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 1 ಕೆ.ಜಿ 25 ಗ್ರಾಂ ತೂಕದ ಕೊಕೇನ್ ಹಾಗೂ 50 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟೇಲ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ 67.50 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. ಯಲಹಂಕ ಉಪವಿಭಾಗ ಠಾಣೆ ಇನ್ಸ್ಪೆಕ್ಟರ್ ಸುಧಾಕರ್ ರೆಡ್ಡಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು.
|
eesanje/url_46_217_2.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
“ಸಾರಿಗೆ ಇಲಾಖೆ ಖಾಸಗೀಕರಣ ಬೇಡ”
|
2 |
+
ಬೆಂಗಳೂರು,ಮಾ.2- ಸಾರಿಗೆ ಇಲಾಖೆಯನ್ನು ಖಾಸಗೀರಣ ಮಾಡಲು ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಎಚ್ಚರಿಸಿದೆ. ಈ ಕೂಡಲೆ ಸಾರಿಗೆ ಇಲಾಖೆಯನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೈಬಿಡಬೇಕು ಇಲ್ಲದಿದ್ದರೆ ಮಾ.5 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಫೆಡರೇಷನ್ ಎಚ್ಚರಿಕೆ ನೀಡಿದೆ.
|
3 |
+
ಈಗಾಗಲೇ ಬಿಎಂಟಿಸಿಯಲ್ಲಿ 600 ಎಲೆಕ್ಟ್ರಿಕ್ ಬಸ್ಗಳನ್ನು ಖಾಸಗಿ ಮಾಲೀಕತ್ವದಲ್ಲಿ ಓಡಿಸಲಾಗುತ್ತಿದೆ. ಇದೀಗ ಮತ್ತೆ ಕೆಎಸ್ಆರ್ಟಿಸಿಯಲ್ಲಿ ಖಾಸಗಿ ಮಾಲೀಕತ್ವದಲ್ಲಿ 600 ಬಸ್ ಸಂಚಾರಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಸರ್ಕಾರ ಸಾರಿಗೆ ಇಲಾಖೆಯನ್ನು ಖಾಸಗೀಕರಣ ಮಾಡುವತ್ತ ಹೆಜ್ಜೆ ಇಟ್ಟಿರುವುದು ಸಾಬೀತಾಗಿದೆ.
|
4 |
+
ಹೀಗಾಗಿ ನಾವು ಖಾಸಗೀಕರಣ ಪ್ರಕ್ರಿಯೆಯನ್ನು ಕೈಬಿಡುವಂತೆ ಸಂಬಂಧಪಟ್ಟವರಿಗೆ ಮನವಿ ಮಾಡಿಕೊಂಡಿದ್ದೇವೆ ಒಂದು ವೇಳೆ ನಮ್ಮ ಮಾತು ಮೀರಿ ಖಾಸಗೀಕರಣಕ್ಕೆ ಮುಂದಾದರೆ ಮಾ.5 ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟಟನೆ ನಡೆಸಲಾಗುವುದು ಎಂದು ಫೆಡರೇಷನ್ ಎಚ್ಚರಿಸಿದೆ.
|
eesanje/url_46_217_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಸ್ಪೋಟ : ಗಾಯಾಳುಗಳಿಗೆ ಸಿಎಂ ಸಾಂತ್ವನ
|
2 |
+
ಬೆಂಗಳೂರು,ಮಾ.2- ನಗರದ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಪೋಟದಿಂದ ಗಾಯಗೊಂಡವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಯವರು ನೇರವಾಗಿ ಆಸ್ಪತ್ರೆಗೆ ತೆರಳಿದರು. ಅಲ್ಲಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.
|
3 |
+
ಇದೇ ವೇಳೆ ರೋಗಿಗಳ ಜೊತೆಯೂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಧೈರ್ಯವಾಗಿರಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಸಾಂತ್ವನ ಹೇಳಿದರು. ಗಾಯಗೊಂಡವರ ಕುಟುಂಬದ ಸದಸ್ಯರ ಜೊತೆ ಕೂಡಾ ಮಾತುಕತೆ ನಡೆಸಿದರು. ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಈಗಾಗಲೇ ಹೇಳಿಕೆ ನೀಡಲಾಗಿದೆ. ಬಳಿಕ ಘಟನಾ ಸ್ಥಳಕ್ಕೆ ಪರಿಶೀಲನೆ ನಡೆಸಿದರು.
|
4 |
+
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ನಿನ್ನೆ ರಾತ್ರಿಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಇಂದು ಬೆಳಿಗ್ಗೆ ಮುಖ್ಯಮಂತ್ರಿಯವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
|
eesanje/url_46_217_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಎಸ್ಎಂಕೆಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್
|
2 |
+
ಬೆಂಗಳೂರು,ಮಾ.2- ಮೈಸೂರು ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿರುವುದರಿಂದ ವಿಶ್ವವಿದ್ಯಾಲಯಕ್ಕೆ ಕೀರ್ತಿ ಹೆಚ್ಚಿರುವುದರ ಜತೆಗೆ ಮಂಡ್ಯ ಜನರಿಗೆ ಗೌರವ ಸಂದಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.
|
3 |
+
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಳೆ ನಡೆಯಲಿರುವ 104ನೆ ಮೈಸೂರು ವಿವಿ ಘಟಿಕೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ವಿವಿ ನಿರ್ಧರಿಸಿರುವುದು ಸ್ವಾಗತಾರ್ಹ. ಮೈಸೂರು ವಿವಿಗೆ ವೈಯಕ್ತಿಕವಾಗಿ ಮತ್ತು ಮಂಡ್ಯ ಜನತೆ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದ್ದಾರೆ.
|
4 |
+
ಮೈಸೂರು ವಿವಿಯ ಹಳೆಯ ವಿದ್ಯಾರ್ಥಿಯಾದ ಎಸ್.ಎಂ.ಕೃಷ್ಣ ಅವರು ಅಮೆರಿಕದ ಟೆಕ್ಸಾಸ್ ರಾಜ್ಯದ ಸದರನ್ ಮೆಥಡಿಸ್ ವಿವಿಯಲ್ಲಿ ಅಂತಾರಾಷ್ಟ್ರೀಯ ಕಾನೂನು ಬಗ್ಗೆ ಉನ್ನತ ಶಿಕ್ಷಣ ಪಡೆದು ವಾಷಿಂಗ್ಟನ್ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿವಿಯಲ್ಲಿ ಪ್ರತಿಷ್ಠಿತ ಫುಲ್ಬ್ರೈಟ್ ವಿದ್ಯಾರ್ಥಿವೇತನ ಪಡೆದುಕೊಂಡಿದ್ದರು.
|
5 |
+
ಎಸ್ಎಂಕೆ ಅವರು ಆರು ದಶಕಗಳ ಕಾಲ ಸುದೀರ್ಘ ಸಾಮಾಜಿಕ, ರಾಜಕೀಯ ಸೇವೆ ಸಲ್ಲಿಸಿ ಶ್ರೇಷ್ಠ ರಾಜಕಾರಣಿ ಎನಿಸಿಕೊಂಡಿದ್ದಾರೆ. ಅವರ ಸೇವೆ ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮ ವಿಭೂಷಣ ಪ್ರಶಸ್ತಿ ನೀಡಿತ್ತು.ಕರ್ನಾಟಕ ವಿಧಾನಸಭೆ, ವಿಧಾನ ಪರಿಷತ್, ರಾಜ್ಯಸಭೆ, ಲೋಕಸಭೆ ಹಾಗೂ ವಿಧಾನಸಭಾ ಅಧ್ಯಕ್ಷರಾಗಿ, ಕರ್ನಾಟಕದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರದ ರಾಜಪಾಲರಾಗಿ, ಕೇಂದ್ರ ಸಚಿವರಾಗಿ ಗಣನೀಯ ಸೇವೆ ಸಲ್ಲಿಸಿದ ಅವರ ಸಾಧನೆಗಳಿಗೆ ಸಂದ ಗೌರವ ಎಂದು ದಿನೇಶ್ ಬಣ್ಣಿಸಿದ್ದಾರೆ.
|
eesanje/url_46_217_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಜನಾರ್ದನ ರೆಡ್ಡಿ ಪುನಃ ಬಿಜೆಪಿಗೆ ಕರೆತರಲು ಮುಂದುವರೆದ ಯತ್ನ
|
2 |
+
ಬೆಂಗಳೂರು,ಮಾ.2- ಮಾಜಿ ಸಚಿವ, ಗಂಗಾವತಿ ಶಾಸಕ ಜನಾದರ್ನ ರೆಡ್ಡಿ ಅವರನ್ನು ಪುನಃ ಬಿಜೆಪಿಗೆ ಕರೆತರುವ ಪ್ರಯತ್ನಗಳು ಜೋರಾಗಿಯೇ ನಡೆಯುತ್ತಿವೆ. ಮಾಜಿ ಸಚಿವ ಶ್ರೀರಾಮುಲು ತಮ್ಮ ಆಪ್ತ ಸ್ನೇಹಿತನನ್ನು ಮರಳಿ ಮನೆಗೆ ಕರೆತರಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದು, ಈ ವಿಚಾರವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಜೊತೆಯೂ ಮಾತುಕತೆ ನಡೆಸಿದ್ದಾರೆ.
|
3 |
+
ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೆ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದಿದ್ದಾರೆ. ಆದರೆ, ಜನಾರ್ದನ ರೆಡ್ಡಿ ನಡೆ ಇನ್ನು ನಿಗೂಢವಾಗಿದೆ. ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ ಜನಾರ್ಧನ ರೆಡ್ಡಿ, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಸ್ರ್ಪಧಿಸಿ ಗೆದ್ದಿರುವುದರ ಜೊತೆಗೆ ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿದ್ದಾರೆ. ಈ ಹಿನ್ನೆಲೆ ಲೋಕಸಭಾ ಚುನಾವಣೆಯಲ್ಲೂ ಜನಾಧರ್ನ ರೆಡ್ಡಿ ಪ್ರಭಾವ ಬೀರಿದರೆ ಕಷ್ಟವಾಗುತ್ತದೆ ಎಂದು ಜನಾರ್ಧನ ರೆಡ್ಡಿ ಅವರನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಲು ತೆರೆಮರೆಯ ಪ್ರಯತ್ನಗಳು ನಡೆಯುತ್ತಲೇ ಇವೆ.
|
4 |
+
ಕೆಲ ದಿನಗಳ ಹಿಂದಷ್ಟೇ ಶ್ರೀರಾಮುಲು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಆಗ ಜನಾರ್ಧನ ರೆಡ್ಡಿ ಬಗ್ಗೆ ಚರ್ಚೆಯಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ ಜನಾರ್ಧನ ರೆಡ್ಡಿ ಜನಪ್ರಿಯ ನಾಯಕ. ಅವರು ಪಕ್ಷಕ್ಕೆ ವಾಪಸ್ ಬಂದರೆ ಬಿಜೆಪಿಗೆ ಬಲ ಬರಲಿದೆ. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಮೈಸೂರಿಗೆ ಅಮಿತ್ ಶಾ ಆಗಮಿಸಿದಾಗಲೂ ಜನಾರ್ಧನ ರೆಡ್ಡಿ ಬಗ್ಗೆ ಚರ್ಚೆಯಾಗಿದೆ. ಶ್ರೀರಾಮುಲು ಅವರು ಪ್ರತಿ ಅವಕಾಶದಲ್ಲೂ ತಮ್ಮ ಆಪ್ತ ಸ್ನೇಹಿತನನ್ನು ಮರಳಿ ಪಕ್ಷಕ್ಕೆ ಕರೆತರಲು ಶ್ರಮಪಡುತ್ತಿರುವುದು ಕಂಡುಬರುತ್ತಿದೆ.
|
5 |
+
ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಜನಾಧರ್ನ ರೆಡ್ಡಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಯತ್ನಗಳಿಗೆ ವೇಗ ಸಿಕ್ಕಿತ್ತು. ಆದರೆ ಜನಾಧರ್ನ ರೆಡ್ಡಿ ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ, ಬೇಕಿದ್ದರೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಕೆಲ ದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕುವ ಮೂಲಕ ಜನಾರ್ಧನ ರೆಡ್ಡಿ ಎಲ್ಲರನ್ನು ಅಚ್ಚರಿಗೊಳಪಡಿಸಿದ್ದರು. ಈ ಮೂಲಕ ಬಿಜೆಪಿ ಕಡೆ ನನ್ನ ನಡೆಯಿಲ್ಲ ಎಂಬುದನ್ನು ರೆಡ್ಡಿ ಸ್ಪಷ್ಟಪಡಿಸಿದ್ದರು.
|
6 |
+
ಬಿಜೆಪಿ ಸೇರ್ಪಡೆಗೆ ಹಿಂದೇಟು ಏಕೆ?:ಕಳೆದ ವರ್ಷ ವಿಧಾನಸಭಾ ಚುನಾವಣೆ ವೇಳೆ ತಮಗೆ ಟಿಕೆಟ್ ನೀಡಲಿಲ್ಲ ಎಂಬ ಸಿಟ್ಟು ಜನಾಧರ್ನ ರೆಡ್ಡಿಯವರಿಗಿದೆ. ಬಿಜೆಪಿ ಪರ ಒಲವು ಹೊಂದಿದ್ದರು ಕೂಡ ಟಿಕೆಟ್ ನಿರಾಕರಿಸಿದ ಕೇಂ��್ರದ ನಾಯಕರೇ ತಮ್ಮನ್ನು ಸಂಪರ್ಕಿಸಲಿ ಎನ್ನುವ ಇರಾದೆಯಲ್ಲಿ ಜನಾರ್ದನ ರೆಡ್ಡಿ ಇದ್ದಾರೆ. ಈಗಾಗಲೇ ಎಲ್ಲರ ಕಡೆಯಿಂದಲೂ ವಸ್ತುಚಿತ್ರಣವನ್ನು ಪಡೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನಾಧರ್ನ ರೆಡ್ಡಿ ಅವರನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಅದಾದ ಬಳಿಕ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.
|
7 |
+
ರೆಡ್ಡಿ-ಶ್ರೀರಾಮುಲು ಸ್ನೇಹ!ಕರ್ನಾಟಕ ರಾಜಕೀಯದಲ್ಲಿ ಅತ್ಯುತ್ತಮ ಸ್ನೇಹಿತರೆಂದರೆ ಅದು ಶ್ರೀರಾಮುಲು ಹಾಗೂ ಜನಾಧರ್ನ ರೆಡ್ಡಿ ಎಂದು ಹೇಳಲಾಗುತ್ತಿತ್ತು. ಆದರೆ, ವಿಧಾನಸಭಾ ಚುನಾವಣೆ ವೇಳೆ ಕೆಲ ಕಾರಣಗಳಿಗೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಈ ಹಿನ್ನೆಲೆ ಇಬ್ಬರು ಅಂತರ ಕಾಯ್ದುಕೊಂಡಿದ್ದಾರೆ. ಶ್ರೀರಾಮುಲು ಅವರೇ ಆಸಕಿವಹಿಸಿ ತಮ್ಮ ಸ್ನೇಹಿತನನ್ನು ಬಿಜೆಪಿಗೆ ವಾಪಸ್ ಕರೆತರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಜನಾರ್ಧನ ರೆಡ್ಡಿ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದುಬಂದಿದೆ.
|