602fdcd61812cd757f2f8e7ed359d02318b3c8b7c8126eaa89ea49329aba359f
Browse files- eesanje/url_46_138_6.txt +5 -0
- eesanje/url_46_138_7.txt +10 -0
- eesanje/url_46_138_8.txt +5 -0
- eesanje/url_46_138_9.txt +14 -0
- eesanje/url_46_139_1.txt +13 -0
- eesanje/url_46_139_10.txt +5 -0
- eesanje/url_46_139_11.txt +6 -0
- eesanje/url_46_139_12.txt +6 -0
- eesanje/url_46_139_2.txt +5 -0
- eesanje/url_46_139_3.txt +15 -0
- eesanje/url_46_139_4.txt +5 -0
- eesanje/url_46_139_5.txt +5 -0
- eesanje/url_46_139_6.txt +5 -0
- eesanje/url_46_139_7.txt +6 -0
- eesanje/url_46_139_8.txt +9 -0
- eesanje/url_46_139_9.txt +7 -0
- eesanje/url_46_13_1.txt +9 -0
- eesanje/url_46_13_10.txt +6 -0
- eesanje/url_46_13_11.txt +6 -0
- eesanje/url_46_13_12.txt +22 -0
- eesanje/url_46_13_2.txt +7 -0
- eesanje/url_46_13_3.txt +20 -0
- eesanje/url_46_13_4.txt +10 -0
- eesanje/url_46_13_5.txt +8 -0
- eesanje/url_46_13_6.txt +5 -0
- eesanje/url_46_13_7.txt +6 -0
- eesanje/url_46_13_8.txt +11 -0
- eesanje/url_46_13_9.txt +6 -0
- eesanje/url_46_140_1.txt +7 -0
- eesanje/url_46_140_10.txt +5 -0
- eesanje/url_46_140_11.txt +7 -0
- eesanje/url_46_140_12.txt +4 -0
- eesanje/url_46_140_2.txt +11 -0
- eesanje/url_46_140_3.txt +6 -0
- eesanje/url_46_140_4.txt +11 -0
- eesanje/url_46_140_5.txt +11 -0
- eesanje/url_46_140_6.txt +5 -0
- eesanje/url_46_140_7.txt +6 -0
- eesanje/url_46_140_8.txt +5 -0
- eesanje/url_46_140_9.txt +5 -0
- eesanje/url_46_141_1.txt +10 -0
- eesanje/url_46_141_10.txt +9 -0
- eesanje/url_46_141_11.txt +8 -0
- eesanje/url_46_141_12.txt +12 -0
- eesanje/url_46_141_2.txt +12 -0
- eesanje/url_46_141_3.txt +6 -0
- eesanje/url_46_141_4.txt +6 -0
- eesanje/url_46_141_5.txt +8 -0
- eesanje/url_46_141_6.txt +5 -0
- eesanje/url_46_141_7.txt +8 -0
eesanje/url_46_138_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪಾಳೇಗಾರಿಕೆಯ ಕಾಂಗ್ರೆಸ್ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ । ವಿಜಯೇಂದ್ರ
|
2 |
+
ಬೆಂಗಳೂರು,ಮೇ21-ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
|
3 |
+
ಸಚಿವ ಸತೀಶ್ ಜಾರಕಿಹೊಳಿ ಅವರ ಸ್ವಕ್ಷೇತ್ರ ಯಮಕನಮರಡಿ ವ್ಯಾಪ್ತಿಯ ಇಸ್ಲಾಂಪುರ ಗ್ರಾಮದ ರೈತ ತನ್ನ ಕೃಷಿ ಚಟುವಟಿಕೆಯ ಸಲುವಾಗಿ ಮಾಡಿಕೊಂಡಿದ್ದ ಖಾಸಗಿ ಸಾಲವನ್ನು ತೀರಿಸಲಾಗದೇ ಪತ್ನಿ, ಪುತ್ರನನ್ನು ನಿಷೇಧಿತ ಜೀತಪದ್ಧತಿಗಿಟ್ಟು, ಅಕ್ರಮ ಗೃಹ ಬಂಧನದ ಶಿಕ್ಷೆ ಅನುಭವಿಸುವ, ಅಪಮಾನ ಹಾಗೂ ಅಸಹಾಯಕ ಪರಿಸ್ಥಿತಿಯಿಂದ ಆತಹತ್ಯೆಗೆ ಶರಣಾಗಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
|
4 |
+
ಈ ಸರ್ಕಾರದ ಆಡಳಿತದಲ್ಲಿ ರಾಜ್ಯದ ಜನತೆ ಇನ್ನೂ ಏನೇನು ಅನುಭವಿಸಬೇಕೋ? ತಿಳಿಯದಾಗಿದೆ. ಗೂಂಡಾಗಳು, ಮೀಟರ್ ಬಡ್ಡಿ ದಂಧೆಕೋರರು, ಕೊಲೆಗಡುಕರಿಗೆ ಈ ಸರ್ಕಾರದ ಆಡಳಿತ ವ್ಯವಸ್ಥೆ ನೆರಳಿನ ಭಾಗ್ಯ ಕಲ್ಪಿಸಿಕೊಡುತ್ತಿದೆ. ಈ ಸರ್ಕಾರಕ್ಕೆ ನೈತಿಕತೆಯಿದ್ದರೆ ಕೂಡಲೇ ಯಮಕನಮರಡಿ ರೈತನ ಆತಹತ್ಯೆ ಪ್ರಕರಣದ ಕುರಿತು ಕಠಿಣ ಕ್ರಮ ಜರುಗಿಸಿ ಮುಂದೆಂದೂ ಇಂಥ ಹೀನ ಘಟನೆಗಳು ರಾಜ್ಯದಲ್ಲಿ ತಲೆ ಎತ್ತದಂತೆ ಎಚ್ಚರಿಕೆ ವಹಿಸಲಿ ಎಂದು ಸಲಹೆ ಮಾಡಿದ್ದಾರೆ.
|
5 |
+
ರೈತ ಸಮೂಹಕ್ಕೆ ಆತಸ್ಥೈರ್ಯ ತುಂಬುವ ಕಾರ್ಯಕ್ರಮ ರೂಪಿಸಲಿ, ಮೃತ ರೈತನ ಕುಟುಂಬಕ್ಕೆ ಸೂಕ್ತ ಆರ್ಥಿಕ ನೆರವು ಹಾಗೂ ಭದ್ರತೆ ಒದಗಿಸಲಿ ಎಂದು ಅವರು ಆಗ್ರಹಿಸಿದ್ದಾರೆ.
|
eesanje/url_46_138_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ದೇವರಾಜೇಗೌಡ ಜೊತೆ ಮಾತನಾಡಿರುವುದಾಗಿ ಸ್ವತಃ ಡಿಸಿಎಂ ಒಪ್ಪಿಕೊಂಡ ಮೇಲೆ ಇನ್ನೂ ಸಾಕ್ಷಿ ಬೇಕೇ..? : ಕುಮಾರಸ್ವಾಮಿ
|
2 |
+
ಬೆಂಗಳೂರು,ಮೇ21-ವಕೀಲ ದೇವರಾಜೇಗೌಡ ಅವರೊಂದಿಗೆ ಅರ್ಧ ನಿಮಿಷ ಮಾತನಾಡಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಒಪ್ಪಿಕೊಂಡ ಮೇಲೆ ಮುಖ್ಯಮಂತ್ರಿಗೆ ಬೇರೆ ಯಾವ ಸಾಕ್ಷಿ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಾಕ್ಷಿ ಕೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ದೇವರಾಜೇಗೌಡ, ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಂಭಾಷಣೆ ಸಾಕ್ಷಿಯಾಗುವುದಿಲ್ಲವೇ? ಅರ್ಧ ನಿಮಿಷ ಮಾತನಾಡಿರುವುದು ಪ್ರಮುಖ ಅಂಶವಲ್ಲವೇ? ಆದರೂ ಸಾಕ್ಷಿ ಕೊಡಿ ಎಂದು ಕೇಳುತ್ತಿದ್ದಾರೆ ಎಂದರು.
|
4 |
+
ಎಸ್ಐಟಿಯವರು ಏಳು ಜನರನ್ನು ಬಂಧಿಸಿ ಕರೆತಂದಿದ್ದಾರೆ. ಯಾವ ಸಾಕ್ಷಿ ಆಧಾರದ ಮೇಲೆ ಬಂಧನ ಮಾಡಿ ಕರೆತಂದಿದ್ದಾರೆ. ಪ್ರತಿನಿತ್ಯ ಹಲವರನ್ನು ಕರೆದು ಕಿರುಕುಳ ನೀಡುತ್ತಿದ್ದಾರೆ. ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದ ಹಾಗೆ ಸಂಭಾಷಣೆ ಇದ್ದರೂ ಮಾಹಿತಿ ಕೊಡಿ ಎಂದು ಉಪಮುಖ್ಯಮಂತ್ರಿ ಕೇಳುತ್ತಾರೆ ಎಂದು ಹೇಳಿದರು.
|
5 |
+
ಬಹಳ ಕಷ್ಟಪಟ್ಟು ದೂರು ಕೊಡಿಸಿರುವುದಾಗಿ ಮಾತನಾಡುವಾಗ ಆ ಮಹಾನುಭಾವ ಹೇಳಿದ್ದಾರೆ. ಇದಕ್ಕಿಂತಲೂ ಇನ್ಯಾವ ಸಾಕ್ಷಿ ಬೇಕು ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.
|
6 |
+
ಪ್ರಕರಣಕ್ಕೂ ಅವರಿಗೂ ಏನು ಸಂಬಂಧ? ಎಂದ ಅವರು, ಐದಾರು ಪ್ರಶ್ನೆಗಳನ್ನು ಕೇಳಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಂಸದ ಪ್ರಜ್ವಲ್ ಅವರ ಮೇಲೆ ಆರೋಪ ಕೇಳಿಬಂದ ಕೂಡಲೇ ಪಕ್ಷದಿಂದ ಅಮಾನತು ಮಾಡಿರುವುದು ನೈತಿಕತೆಯ ಆಧಾರದ ಮೇಲೆ. ಆದರೆ ಆರೋಪಿ ಸ್ಥಾನದಲ್ಲಿದ್ದರೂ ಅಪರಾಧಿಯನ್ನಾಗಿ ಮಾಡಿದ್ದಾರೆ. ಎಸ್ಐಟಿ ಅವರೇ ವಿಡಿಯೋದಲ್ಲಿ ಪುರುಷರ ಮುಖವಾಡವೇ ಇಲ್ಲ ಎಂದು ಹೇಳಿದ ಮೇಲೆ ಅಪರಾಧಿ ಸ್ಥಾನದಲ್ಲಿ ಯಾಕೆ ನಿಲ್ಲಿಸುತ್ತಾರೆ ಎಂದು ಪ್ರಶ್ನಿಸಿದರು.
|
7 |
+
ಇನ್ನು ಆರೋಪಿ ಸ್ಥಾನದಲ್ಲಿದ್ದು, ಅಪರಾಧಿ ಎಂದು ಸಾಬೀತಾಗಿಲ್ಲ. ನಿಮ್ಮ ರೀತಿ ನಾವು ಬಂಡತನ ತೋರಿಲ್ಲ. ಬಂಡತನದಲ್ಲಿ ನಿಮ್ಮ ಮಗನದ್ದು ನಡೆಯಿತಲಾ? ನಾನು ಈ ಹೆಸರು ಕೊಟ್ಟಿದ್ದೆ. ಆ ಹೆಸರು ಹೇಗೆ ಬಂತು ಎಂದು ಹೇಳಿದ್ದ ವಿಚಾರವನ್ನು ಸಿಎಸ್ಆರ್ ಹಣಕ್ಕಾಗಿ ಫೋನ್ ಮಾಡಿದ್ದು ಎಂದು ತಿರುಚಿದಿರಿ. ಮುಖ್ಯಮಂತ್ರಿಯಾಗಿ ಸಾಕ್ಷಿಗಳನ್ನು ಯಾವ ರೀತಿ ನಾಶ ಮಾಡುತ್ತೀರಿ ಎಂದು ಆರೋಪಿಸಿದರು.
|
8 |
+
ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದೀರಿ ಎಂದು ಆರೋಪಿಸಿದರು. ಮಾಜಿ ಸಚಿವ ರೇವಣ ಕುಟುಂಬದಲ್ಲಿ ಏಳೆಂಟು ವರ್ಷ ಕೆಲಸದಲ್ಲಿದ್ದವರು ಅವರಿಗೆ ತೊಂದರೆಯಾಗಿದ್ದರೆ ಏಕೆ ದೂರು ನೀಡಲಿಲ್ಲ ಎಂದು ಪ್ರಶ್ನಿಸಿದರು. ಅಯ್ಯೋ ಆ ವ್ಯಕ್ತಿಗಳನ್ನು ಇಷ್ಟಾದರೂ ಕರೆದುಕೊಂಡು ಬಂದು ದೂರು ಕೊಡಿಸಿದ್ದೇವೆ ಆ ��ಹಾನುಭಾವ ನಿಮ್ಮ ಡಿಸಿಎಂ ಹೇಳಿದ್ದಾರಲ್ಲಾ? ಇಂಥವರನ್ನು ಇಟ್ಟುಕೊಂಡು ರಾಜ್ಯ ಕಟ್ಟುತ್ತೀರಾ ಎಂದು ವಾಗ್ದಾಳಿ ನಡೆಸಿದರು.
|
9 |
+
ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ತಪ್ಪಿತಸ್ಥರನ್ನು ರಕ್ಷಣೆ ಮಾಡಲು ಹೋಗುವುದಿಲ್ಲ. ಜೆಡಿಎಸ್ ಸಂಬಂಧ ಯಾವಾಗ ಮುರಿಯುತ್ತೀರಿ ಎಂದು ಗೃಹಸಚಿವ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕಾಗಿಯೇ ಈ ಪ್ರಕರಣವನ್ನು ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿದರು.
|
10 |
+
ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಕಾಂಗ್ರೆಸ್ ಕನಸು ನುಚ್ಚು ನೂರಾಗಿದೆ. ಅದಕ್ಕಾಗಿ ಈ ಪ್ರಕರಣವನ್ನು ಹೊರತಂದು ರಾಜ್ಯವೇ ತಲೆತಗ್ಗಿಸುವಂತಹ ಕೆಲಸ ಮಾಡಲಾಗಿದೆ. ಪೆನ್ಡ್ರೈವ್ ಕೊಟ್ಟ ವ್ಯಕ್ತಿಯನ್ನು ಬಂಧಿಸಿದ್ದೀರಾ? ಇದರಲ್ಲೇ ಏನೋ ಹುನ್ನಾರ ಅಡಗಿದೆ. ಪ್ರಚಾರಕ್ಕಾಗಿ ಈ ಪ್ರಕರಣ ಬಳಸಿಕೊಳ್ಳಲಾಗುತ್ತಿದೆ ಹೊರತು ತನಿಖೆಯಿಂದ ನ್ಯಾಯ ಕೊಡಿಸುವ ಉದ್ದೇಶವಿಲ್ಲ ಎಂದರು. ಇಷ್ಟೆಲ್ಲಾ ಆದರೂ ಸರ್ಕಾರ ತಪ್ಪಿತಸ್ಥರಿಗೆ ರಕ್ಷಣೆ ಕೊಡುತ್ತಿದೆ. ಶಿವಕುಮಾರ್ ಅವರನ್ನು ಮುಂದುವರೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು.
|
eesanje/url_46_138_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರೇವ್ ಪಾರ್ಟಿಯಲ್ಲಿ ನಟಿ ಸೇರಿ 101 ಮಂದಿ ಭಾಗಿ । ದಯಾನಂದ್ ಸ್ಪಷ್ಟನೆ
|
2 |
+
ಬೆಂಗಳೂರು,ಮೇ21-ನಗರದ ಹೊರವಲಯದಲ್ಲಿ ನಡೆದ ರೇವೊ ಪಾರ್ಟಿಯಲ್ಲಿ ಖ್ಯಾತ ನಟಿ ಸೇರಿದಂತೆ 101 ಮಂದಿ ಭಾಗಿಯಾಗಿದ್ದರು. ಇದರಲ್ಲಿ ಯಾವುದೇ ಜನಪ್ರತಿನಿಧಿಗಳು ಇರಲಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 19ರಂದು ರಾತ್ರಿ ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್ ಹೌಸ್ವೊಂದರಲ್ಲಿ ಸನ್ಸೆಟ್ ಟೊ ಸನ್ರೈಸ್ ವಿಕ್ಟರಿ ಈವೆಂಟ್ನಲ್ಲಿ ಹೊರರಾಜ್ಯದವರು ಸೇರಿದಂತೆ ಕೆಲ ಸ್ಥಳೀಯರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
|
3 |
+
ಸುಮಾರು 100ಕ್ಕೂ ಹೆಚ್ಚು ಜನ ಪಾರ್ಟಿಯಲ್ಲಿ ಹಾಜರಿದ್ದರು. ಕೂಲಂಕುಷ ತನಿಖೆ ಕೈಗೊಂಡ ವೇಳೆ ಅಲ್ಲಿ ಮಾದಕವಸ್ತುಗಳಾದ ಎಂಬಿಎಂಎ, ಕೊಕೈನ್, ಐಡ್ರೋ ಗಾಂಜಾ ಸೇರಿದಂತೆ ಹಲವು ಮಾದಕವಸ್ತುಗಳು ಪತ್ತೆಯಾಗಿವೆ. 101 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಅದರ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
|
4 |
+
ಈ ಕಾರ್ಯಚರಣೆಯಲ್ಲಿ ಶ್ವಾನದಳ ಬಳಕೆ ಮಾಡಿರುವುದರಿಂದ ಕಾರ್ಯಾಚರಣೆ ಯಶಸ್ವಿಯಾಗಿದೆ. ಅಲ್ಲಿದ್ದ ಕೆಲವರು ಮಾದಕವಸ್ತುಗಳನ್ನು ಕಾರು ಮತ್ತು ವಿವಿಧೆಡೆ ಬಚ್ಚಿಡಲಾಗಿದ್ದ ಮಾದಕಗಳನ್ನು ಶ್ವಾನದಳ ಪತ್ತೆಹಚ್ಚಿದೆ ಎಂದರು. ಕಳೆದ ವರ್ಷ ಶ್ವಾನದಳಕ್ಕೆ ಮಾದಕವಸ್ತು ಪತ್ತೆಗೆ ವಿಶೇಷ ತರಬೇತಿ ನೀಡಲಾಗಿತ್ತು. ಆ ಶ್ವಾನಗಳನ್ನು ಮೊದಲ ಬಾರಿ ಈ ಕಾರ್ಯಚರಣೆಗೆ ಬಳಸಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.
|
5 |
+
ಈ ಸಂಬಂಧ ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಐವರನ್ನು ಬಂಧಿಸಲಾಗಿದೆ. ಸರಹದ್ದಿನ ಆಧಾರದ ಮೇಲೆ ಈ ವ್ಯಾಪ್ತಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.
|
eesanje/url_46_138_9.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಸಂಬಂಧಿಸಿದಂತೆ ದೇಶದ 11 ಕಡೆ ಎನ್ಐಎ ದಾಳಿ
|
2 |
+
ಬೆಂಗಳೂರು,ಮೇ21-ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡದ (ಎನ್ಐಎ) ಅಧಿಕಾರಿಗಳು ಬೆಂಗಳೂರು ಹಾಗೂ ಕೋಯಮತ್ತೂರು ಸೇರಿದಂತೆ ದೇಶದ 11 ಕಡೆಗಳಲ್ಲಿ ದಾಳಿ ಮಾಡಿದ್ದಾರೆ.
|
3 |
+
ಇದೇ ವೇಳೆ ಎನ್ಐಎ ಅಧಿಕಾರಿಗಳು ಕೊತ್ತಮತ್ತೂರಿನ ನಾರಾಯಣಗುರು ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಈಗಾಗಲೇ ವಶದಲ್ಲಿರುವ ಶಂಕಿತ ಉಗ್ರರಾದ ಮತೀನ್ ಹಾಗೂ ಶಾಹೀಬ್ಗೆ ಇಬ್ಬರು ವೈದ್ಯರು ಹಣ ಸಂದಾಯ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ವಿಚಾರಣೆ ನಡೆಸಲಾಗಿದೆ.
|
4 |
+
ತನಿಖಾ ಸಂದರ್ಭದಲ್ಲಿ ಕರ್ನಾಟಕ ಮೂಲದ ಇಬ್ಬರು ವೈದ್ಯರು, ಶಂಕಿತ ಉಗ್ರರಿಗೆ ಹಣವನ್ನು ಖಾತೆಗೆ ಜಮೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಹೀಗಾಗಿ ಯಾವ ಕಾರಣಕ್ಕಾಗಿ ವೈದ್ಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
|
5 |
+
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇಬ್ಬರು ಶಂಕಿತರೊಂದಿಗೆ ಸಂಪರ್ಕ ಹೊಂದಿದ ನಾಲ್ಕು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
|
6 |
+
ಮೂಲಗಳ ಪ್ರಕಾರ ಎನ್ಐಎ ಅಧಿಕಾರಿಗಳು ಬೆಂಗಳೂರಿನ ಕುಮಾರಸ್ವಾಮಿಲೇಔಟ್ ಮತ್ತು ಬನಶಂಕರಿಯಲ್ಲಿ ದಾಳಿ ಮಾಡಿದ್ದಾರೆ. ಎನ್ಐಎ ಕೊಯಮತ್ತೂರಿನ ವೈದ್ಯರಾದ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಎನ್ಐಎ ಉನ್ನತ ಮೂಲಗಳು ತಿಳಿಸಿವೆ.
|
7 |
+
ಶಂಕಿತ ಉಗ್ರ ಮತೀನ್ ಬೆಂಗಳೂರಿಗೆ ಬಂದಾಗ ಸಹಾಯ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಆತನೊಂದಿಗೆ ಸಂಪರ್ಕಕ್ಕೆ ಬಂದಿದ್ದವರ ಮನೆ ಹಾಗೂ ವಾಸಸ್ಥಳದ ಮೇಲೆ ದಾಳಿ ಮಾಡಲಾಗಿದೆ.
|
8 |
+
ಮಾ.1ರಂದು ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ ಒಟ್ಟು 9 ಜನ ಗಾಯಗೊಂಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ, ಏಪ್ರಿಲ್ 12ರಂದು ಪಶ್ಚಿಮಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ನನ್ನು ಬಂಧಿಸಿತ್ತು.
|
9 |
+
ಮುಂದುವರೆದ ತನಿಖೆಯಲ್ಲಿ ಆರೋಪಿಗಳಿಂದ ಮತ್ತಷ್ಟು ಸ್ಫೋಟಕ ಅಂಶಗಳು ಹೊರಬಂದ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ. ತನಿಖೆಯ ನೇತೃತ್ವ ವಹಿಸಿರುವ ಎನ್ಐಎ ಘಟನೆ ನಡೆದ 43 ದಿನಗಳ ಬಳಿಕ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲ��� ಯಶಸ್ವಿಯಾಗಿದೆ. ಇವರ ಬಂಧನಕ್ಕೂ ಮುನ್ನ ಪ್ರಮುಖ ಆರೋಪಿಗಳಿಗೆ ಲಾಜಿಸ್ಟಿಕ್ ಬೆಂಬಲ ನೀಡಿದ ಆರೋಪದಡಿ ಚಿಕ್ಕಮಗಳೂರಿನ ಕಳಸ ಮೂಲದ ಮುಜಾಮಿಲ್ ಶರೀಫ್ ಎಂಬಾತನನ್ನು ಮಾರ್ಚ್ 26ರಂದು ಬಂಧಿಸಿತ್ತು.
|
10 |
+
ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಹಚ್ಚುವ ಮತ್ತು ಬಂಧಿಸುವ ಪ್ರಯತ್ನಗಳ ಭಾಗವಾಗಿ ಮಾರ್ಚ್ 29ರಂದು ಕರ್ನಾಟಕ, ತಮಿಳುನಾಡು ಮತ್ತು ಉತ್ತರಪ್ರದೇಶದ 18 ಸ್ಥಳಗಳಲ್ಲಿ ಎನ್ಐಎ ತಂಡಗಳು ಶೋಧ ನಡೆಸಿದ್ದವು. ಇದಲ್ಲದೇ ಆರೋಪಿಗಳ ಬಂಧನಕ್ಕೆ ಸಹಾಯಕಾರಿಯಾಗಬಲ್ಲ ಮಾಹಿತಿ ನೀಡಿದವರಿಗೆ ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.
|
11 |
+
ಈ ಘಟನೆಯ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಹಾಗೂ ಬಾಂಬ್ ಇರಿಸಿದ್ದ ಮುಸಾವಿರ್ ಹುಸೇನ್ ಶಾಜಿಬ್ನನ್ನು ಎನ್ಐಎ ಬಂಧಿಸಿದೆ. ಬೆಂಗಳೂರಿನ ಕುಂದಲಹಳ್ಳಿ ಬಾಂಬ್ ಸ್ಪೋಟಿಸಿ ಕೋಲ್ಕತ್ತಾದಲ್ಲಿ ಇವರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವಾಗಲು ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಅಡಗಿಕೊಂಡಿದ್ದರು ಎಂಬ ಮಾಹಿತಿ ಪತ್ತೆಯಾಗಿತ್ತು.
|
12 |
+
ಅಬ್ದುಲ್ ಮತೀನ್ ತಾಹ, ಯಶ್ ಶಹನವಾಜ್ ಪಟೇಲ್ ಆಧಾರ್ಕಾರ್ಡ್ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್ ಹುಸೇನ್ ಶಾಜಿಬ್, ಅನೋಲ್ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್ ಕಾರ್ಡ್ ರಚಿಸಿಕೊಂಡಿದ್ದರು. ಇಬ್ಬರೂ ಕೂಡ ಇದೇ ದಾಖಲೆಯಲ್ಲಿಯೇ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್ಗೆ ದಾಖಲೆ ನೀಡಿ ವಾಸ್ತವ್ಯ ಹೂಡಿದ್ದರು.
|
13 |
+
ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅಲ್ಲದೇ, ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.
|
14 |
+
ಇಬ್ಬರೂ ಉಗ್ರರು ಕೂಡ ತಪ್ಪಿಸಿಕೊಳ್ಳುವುದರಲ್ಲಿ ಮಾಸ್ಟರ್ ಮೈಂಡ್ ಆಗಿದ್ದರು. ಪಕ್ಕಾ ಚಾಲಾಕಿತನದಿಂದಲೇ ಕೋಲ್ಕತದಲ್ಲಿ ಇವರು ತಪ್ಪಿಸಿಕೊಳ್ಳುತ್ತಿದ್ದರು. 12 ದಿನ ಕೋಲ್ಕತ್ತದಲ್ಲಿದ್ದ ಇವರು, ಮೂರು ನಾಲ್ಕು ದಿನಕ್ಕೆ ಸ್ಥಳ ಬದಲಾಯಿಸುತ್ತಿದ್ದರು. ಆದರೆ ಮುಸಾವಿರ್ ಹಾಗೂ ಮತೀನ್ ತಾಹ ಹೆಜ್ಜೆ ಗುರುತನ್ನು ಪತ್ತೆ ಹಚ್ಚುವಲ್ಲಿ ಎನ್ಐಎ ಯಶಸ್ವಿಯಾಗಿತ್ತು.
|
eesanje/url_46_139_1.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ ಸರ್ಕಾರದ 1 ವರ್ಷದ ವೈಫಲ್ಯಗಳ ಚಾರ್ಜ್ಶೀಟ್ ಬಿಡುಗಡೆ ಮಾಡಿದ ಬಿಜೆಪಿ
|
2 |
+
ಬೆಂಗಳೂರು,ಮೇ20-ರಾಜ್ಯದಲ್ಲಿ ಕುಸಿದು ಬರುವ ಕಾನೂನು ಸುವ್ಯವಸ್ಥೆ, ಕೊಲೆ, ಸುಲಿಗೆ, ಅತ್ಯಾಚಾರ, ಕಮೀಷನ್ ಆರೋಪ, ಐದು ಗ್ಯಾರಂಟಿ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಒಂದು ವರ್ಷದ ಅವಧಿಯಲ್ಲಿನ ವೈಫಲ್ಯಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ ದೋಷಾರೋಪಪಟ್ಟಿ(ಚಾರ್ಜ್ಶೀಟ್) ಬಿಡುಗಡೆ ಮಾಡಿದೆ.
|
3 |
+
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಪಕ್ಷದ ವಕ್ತಾರ ಅಶ್ವತ್ಥ ನಾರಾಯಣ ಸೇರಿದಂತೆ ಮತ್ತಿತರರು ಕಾಂಗ್ರೆಸ್ ಸರ್ಕಾರದ ಪಟ್ಟಿಯನ್ನು ಬಿಡುಗಡೆ ಮಾಡಿ ಇದೊಂದು ರೈತ ವಿರೋಧಿ, ಜನವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
|
4 |
+
ನಂತರ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಅವೆಲ್ಲ ಹುಸಿಯಾಗಿವೆ. ಇನ್ನು ಮುಂದಾದರೂ ಬೆನ್ನು ತಟ್ಟಿಕೊಳ್ಳುವುದನ್ನು ಬಿಟ್ಟು ಅಭಿವೃದ್ಧಿ ಕಡೆ ಗಮನ ಕೊಡಿ, ಜನ ನಿಮಗೆ ಆಶೀರ್ವಾದ ಮಾಡಿದ್ದನ್ನು ಉಳಿಸಿಕೊಳ್ಳಿ, ಭರವಸೆ ಉಳಿಸಿಕೊಳ್ಳಿ ಎಂದರು.
|
5 |
+
ಕಳೆದ ಏಳೆಂಟು ತಿಂಗಳಿನಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿದೆ, ಹುಬ್ಬಳ್ಳಿಯ ನೇಹಾ, ಅಂಜಲಿ, ಕೊಡಗಿನಲ್ಲಿ ವಿದ್ಯಾರ್ಥಿನಿ ಮೀನಾ ಕೊಲೆ, ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ದಬ್ಬಾಳಿಕೆ ಹೆಚ್ಚಾಗಿದೆ, ಮೂರ್ನಾಲ್ಕು ತಿಂಗಳಿನಲ್ಲಿ 400ಕ್ಕೂ ಹೆಚ್ಚಿನ ಕೊಲೆಯಾಗಿದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ ಹರಾಜಾಗುತ್ತಿದೆ, ಲವ್ ಜಿಹಾದ್ ನಂತಹ ವೇಳೆ ಸರ್ಕಾರದ ಹೇಳಿಕೆ ಕೊಲೆಗಡುಕರಿಗೆ ಶಕ್ತಿ ನೀಡಿದಂತಾಗಿದೆ ಎಂದು ದೂರಿದರು.
|
6 |
+
ಸ್ಪಷ್ಟ ಬಹುಮತದ ಕಾಂಗ್ರೆಸ್ ಸರ್ಕಾರದ ಮೇಲೆ ಜನತೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು ಆದರೆ ನುಡಿದಂತೆ ನಡೆದ ಸರ್ಕಾರ ಎಂದು ಹೊಗಳುಭಟರ ಮೂಲಕ ಬೆನ್ನು ತಟ್ಟಿಸಿಕೊಳ್ಳುತ್ತಿರುವುದೇ ಇವರ ಸಾಧನೆ, ಒಂದು ವರ್ಷದ ಸಾಧನೆ ಶೂನ್ಯ, ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ, ಯಾವುದೇ ಹೊಸ ಯೋಜನೆಗಳಿಗೆ ಚಾಲನೆ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
7 |
+
652 ಕ್ಕೂ ಹೆಚ್ಚಿನ ರೈತರ ಆತಹತ್ಯೆ ಮಾಡಿಕೊಂಡರೂ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಂಡಿಲ್ಲ, ರಾಜ್ಯ ಸರ್ಕಾರ ರೈತರ ಬಗ್ಗೆ ಅಸಡ್ಡೆ ತೋರಿದೆ, ರಾಜ್ಯ ಸರ್ಕಾರದಿಂದ ರೈತರಿಗೆ ಯಾವ ರೀತಿ ಪರಿಹಾರ ಒದಗಿದೆ ಎಂದು ಪ್ರಶ್ನಿಸಿದರು.
|
8 |
+
ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ಗೆ ಖಜಾನೆ ಫುಲ್ ಕ್ಲಿಯರ್. ಸರ್ಕಾರಕ್ಕೆ ವರ್ಷ, ಸಮಸ್ಯೆಗಳು ನೂರೊಂದು. ವರ್ಷಕ್ಕೆ ಲೂಟಿ ಎಷ್ಟು ಎಂದು ಜನ ಲೆಕ್ಕ ಹಾಕುತ್ತಿದ್ದಾರೆ, ನೇಹಾ,ಮೀನ, ಅಂಜಲಿ ಆಯ್ತು ಮುಂದೆ ಯಾರು ಎನ್ನುವ ಸ್��ಿತಿ ಇದೆ, ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಹಿರ ಬಂದರೆ ಗ್ಯಾರಂಟಿ ಇಲ್ಲ, ನಿಶರಚಿತಾರ್ತವಾದರೂ ಗ್ಯಾರಂಟಿ ಇಲ್ಲ, ಕೊಲೆ ಭಾಗ್ಯ ನೀಡಿದೆ ಎಂದು ಟೀಕಿಸಿದರು.
|
9 |
+
ಮಹಿಳೆಯರ ಬದುಕುವ ಅವಕಾಶ ಸರ್ಕಾರ ಕಿತ್ತುಕೊಂಎಯ ಯಾವ ಗ್ಯಾರಂಟಿ ಕೊಟ್ಟು ಏನು ಭಾಗ್ಯ. ಅಂಜಲಿ ಕೊಲೆಗೆ ಪೊಲೀಸ್ ಲೋಪವಿದೆ ಎಂದು ಪರಮೇಶ್ವರ್ ಒಪ್ಪಿಕೊಂಡಿದ್ದಾರೆ, ನಿಮಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇದೆಯಾ? ಗೃಹ ಇಲಾಖೆಯನ್ನು ಮೋದಿ ನಿರ್ವಹಿಸುತ್ತಿದ್ದಾರಾ? ವರ್ಷದಲ್ಲಿ ನೀವು ಮಾಡಿದ್ದೇನು? ಎಂದು ಪ್ರಶ್ನಿಸಿದರು.
|
10 |
+
ದೇಶದ ಗಡಿಯಲ್ಲಿ ಪಾಕ್ ಜಿಂದಾಬಾದ್ ಎನ್ನುತ್ತಿದ್ದರು ಆದರೆ ಈಗ ವಿಧಾಮಸೌಧದಲ್ಲಿಯೂ ಘೋಷಣೆ ಹಾಕಲು ಅನುಮತಿಸಿದ್ದಾರೆ. ಅಲ್ಲಾ ಹೋ ಅಕ್ಬರ್ ಎನ್ನದಿದ್ದಕ್ಕೆ ಹಲ್ಲೆ, ಹನುಮಾನ್ ಚಾಲಿಸ್ ಹಾಕಿದ್ದಕ್ಕೆ ಹಲ್ಲೆಯಾಗಿದೆ, ಈ ಸರ್ಕಾರ ಬಂದು ವರ್ಷವಾಯಿತು, ಮಗು ಕೂಡ ಹುಟ್ಟಿದ ವರ್ಷದಲ್ಲಿ ಅಂಬೆಗಾಲಿಡಲಿದೆ. ಆದರೆ ಈ ಸರ್ಕಾರ ಅಂಬೆಗಾಲನ್ನೂ ಇಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.
|
11 |
+
ರಾಜ್ಯದಲ್ಲಿ ಬರ ಬಂದಿದೆ, ಸಿದ್ದರಾಮಯ್ಯ ಮತ್ತು ಬರಕ್ಕೆ ಏನೋ ಸಂಬಧ ಇದೆ. ಆದರೆ ಈ ಬಾರಿ ಮಕ್ಕಳು ಪಾಸಾಗಲೂ ಬರ, ಮಾರ್ಕ್ಸ್ಗೂ ಬರ ಬಂದಿದೆ, 25 ಪರ್ಸೆಂಟ್ ಬಂದರೆ ಪಾಸ್, ಮುಂದಿನ ವರ್ಷ 100 ಅಂಕ ಕೃಪಾಂಕ ಕೊಡಿ, ಓದನ್ನೂ ಫ್ರೀ ಮಾಡಿ, ಓದದೆ ಪಾಸು ಮಾಡಿ ಎಂದು ಲೇವಡಿ ಮಾಡಿದ್ದಾರೆ.
|
12 |
+
ಪೊಲೀಸ್ ಠಾಣೆಗಳಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆ, ಈ ಸರ್ಕಾರ ಬಂದ ನಂತರ ಮುಕ್ತ ಕೊಲೆ ಗ್ಯಾರಂಟಿ, ಸುಲಿಗೆ ಗ್ಯಾರಂಟಿ, ಹೆಣ್ಣುಮಕ್ಕಳಿಗೆ ಬದುಕುವ ಗ್ಯಾರಂಟಿ ಇಲ್ಲ. ಹಾಗಾಗಿ ಈ ಸರ್ಕಾರವನ್ನು ರಾಜ್ಯಪಾಲರು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
|
13 |
+
ಬೆಂಗಳೂರನ್ನು ಕೊಲೆಗಡುಕರ ಸ್ವರ್ಗವನ್ನಾಗಿ ಮಾಡಿದ್ದೀರಿ, ಯಾವ ಮುಖ ಇಟ್ಟುಕೊಂಡು ಸಾಧನೆ ಬಗ್ಗೆ ಮಾತನಾಡುತ್ತೀರ? ನೀವೇ ಸ್ವತಃ ರಾಜೀನಾಮೆ ಕೊಟ್ಟು ಹೋಗಬೇಕಿತ್ತು, ಭಂಡತನದಿಂದ ಉಳಿದುಕೊಂಡಿದ್ದೀರಿ ಎಂದು ವ್ಯಂಗ್ಯವಾಡಿದರು.
|
eesanje/url_46_139_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪೂರೈಸಿದ್ದು ವರ್ಷ, ಸಾಧಿಸಿದ್ದು ಶೂನ್ಯ, ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ : ವಿಜಯೇಂದ್ರ ಟೀಕೆ
|
2 |
+
ಬೆಂಗಳೂರು,ಮೇ20-ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ವರ್ಷವಾಯಿತು. ಆದರೆ ಸಾಧಿಸಿದ್ದು ಮಾತ್ರ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪೂರೈಸಿದ್ದು ವರುಷ ಮಾತ್ರ ಆದರೆ, ಸಾಧಿಸಿದ್ದು ಶೂನ್ಯ. ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ ಎಂದು ಹರಿಹಾಯ್ದಿದ್ದಾರೆ.
|
3 |
+
ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮ, ನಿರುದ್ಯೋಗ ಭವಣೆ ಹೆಚ್ಚಾಗಿದೆ. ಶಿಕ್ಷಣ ಕ್ಷೇತ್ರ ಎಡವಿ ಬಿದ್ದಿತು, ಉತ್ಪನ್ನ ಕ್ಷೇತ್ರ ಸೊರಗಿತು. ನಾರಿ ಕುಲ ರಕ್ಷಣೆ ಇಲ್ಲದೆ ನಲುಗಿತು, ಬೆಳೆಯೆಲ್ಲ ಒಣಗಿತು. ದಲಿತ ಕಲ್ಯಾಣ ಕಾರ್ಯಗಳು ಕುಸಿಯಿತು. ಹಿಂದುಳಿದವರ ಅಭಿವೃದ್ಧಿ ಹಿಂದುಳಿಯಿತು. ರೈತರ ಬಾಳು ಗೋಳಾಯಿತು ಎಂದು ಆರೋಪಿಸಿದ್ದಾರೆ.
|
4 |
+
ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ ಒಂದು ವರ್ಷದಲ್ಲಿ ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಿವೆ. ಒಂದು ವರ್ಷದಲ್ಲಿ ಸರ್ಕಾರ ಲೋಪ-ದೋಷಗಳು, ವೈಫಲ್ಯಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ರಾಜ್ಯ ಬಿಜೆಪಿ, ತನ್ನ ಎಲ್ಲ ಘಟಕಗಳಿಗೆ ಸೂಚನೆ ನೀಡಿದೆ.
|
5 |
+
ಮತ್ತೊಂದೆಡೆ ವಿಪಕ್ಷದ ಹಿರಿಯ ನಾಯಕರು ಸಹ ಸುದ್ದಿಗೋಷ್ಠಿ ನಡೆಸಿ ಸಮಾಜ ಕಲ್ಯಾಣ, ಆಹಾರ, ಕೃಷಿ ಮತ್ತು ಗೃಹ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ವೈಫಲ್ಯಗಳ ಕುರಿತು ಜನರ ಮುಂದಿಡಲು ತೀರ್ಮಾನಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ರಾಜ್ಯಪಾಲರಿಗೆ ದೂರು ನೀಡಲು ನಿರ್ಧರಿಸಿದೆ.
|
eesanje/url_46_139_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಕುರಿತು ಆರ್.ಅಶೋಕ್ ವ್ಯಂಗ್ಯ
|
2 |
+
ಬೆಂಗಳೂರು,ಮೇ20-ನಾಲಾಯಕ್ ಸಚಿವರು ಹಾಗೂ ಸಾಲು ಸಾಲು ಎಡವಟ್ಟುಗಳು ಮತ್ತು ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಸ್ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರ್ಣಗೊಳ್ಳುತ್ತಿರುವುದರ ಬಗ್ಗೆ ವ್ಯಂಗ್ಯವಾಡಿದ್ದಾರೆ.
|
3 |
+
ಈ ಕುರಿತು ಎಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಾಲಾಯಕ್ ಸಚಿವರು ಸಾಲು ಸಾಲು ಎಡವಟ್ಟುಗಳು ಸಿಎಂ ಕುರ್ಚಿಗೇರಲು ಡಿಸಿಎಂ ಕನಸು, ಕುರ್ಚಿ ಉಳಿಸಿಕೊಳ್ಳಲು ಸಿಎಂ ಸರ್ಕಸ್ಸುಎಂದು ಅಪಹಾಸ್ಯ ಮಾಡಿದ್ದಾರೆ.
|
4 |
+
ಜಾತಿಗೊಂದು, ಜಿಲ್ಲೆಗೊಂದು ಬಣ ನಾಡಿನ ಅಭಿವೃದ್ದಿ ಮಾತ್ರ ಗೌಣ ಇದು ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಕಥೆ ಏಳೂವರೆ ಕೋಟಿ ಕನ್ನಡಿಗರ ದಿನನಿತ್ಯದ ವ್ಯಥೆ ಎಂದು ಲೇವಡಿ ಮಾಡಿದ್ದಾರೆ.
|
5 |
+
ಕುಸಿದ ಕಾನೂನು ಸುವ್ಯವಸ್ಥೆಮಹಿಳೆಯರು ಹೆಣ್ಣುಮಕ್ಕಳಿಗಿಲ್ಲ ಸುರಕ್ಷತೆಏರುತ್ತಲೇ ಇದೆ ಸಾಲದ ಹೊರೆಅಭಿವೃದ್ದಿ ಮಾತ್ರ ಕಣ್ಮರೆನಾಲಾಯಕ್ ಸಚಿವರುಗಳುಸಾಲು ಸಾಲು ಎಡವಟ್ಟುಗಳುಸಿಎಂ ಕುರ್ಚಿಗೇರಲು ಡಿಸಿಎಂ ಕನಸುಕುರ್ಚಿ ಉಳಿಸಿಕೊಳ್ಳಲು ಸಿಎಂ ಸರ್ಕಸ್ಸುಜಾತಿಗೊಂದು, ಜಿಲ್ಲೆಗೊಂದು ಬಣನಾಡಿನ ಅಭಿವೃದ್ದಿ ಮಾತ್ರ ಗೌಣಇದು ಕಾಂಗ್ರೆಸ್…../Iy7fZ4YG8c
|
6 |
+
ಕುಸಿದ ಕಾನೂನು ಸುವ್ಯವಸ್ಥೆ ಮಹಿಳೆಯರು ಹೆಣ್ಣುಮಕ್ಕಳಿಗಿಲ್ಲ ಸುರಕ್ಷತೆ ಏರುತ್ತಲೇ ಇದೆ ಸಾಲದ ಹೊರೆ ಅಭಿವೃದ್ಧಿ ಮಾತ್ರ ಕಣರೆ ಎಂದು ವ್ಯಂಗ್ಯವಾಡಿದ್ದಾರೆ.
|
eesanje/url_46_139_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ : ನಿಖಿಲ್ ಆಕ್ರೋಶ
|
2 |
+
ಬೆಂಗಳೂರು, ಮೇ 20-ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲೂ ರಾಜ್ಯಸರ್ಕಾರದ ಕೈವಾಡವಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಪ್ರಸ್ತಾಪವಾಗಿದೆ. ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕಲ್ಲವೇ ಎಂದು ಹೇಳಿದರು. ಶಿವರಾಮೇಗೌಡರು ಮಾತನಾಡಿರುವ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ರಾಜಕಾರಣವೇ ಬೇರೆ. ಆದರೆ ಒಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
4 |
+
ಚುನಾವಣೆಯಲ್ಲಿ ಹೊಂದಾಣಿಕೆ ಕೆಲವು ಸಲ ಕೆಲವರು ಮಾಡಿಕೊಳ್ಳುತ್ತಾರೆ. ಅದು ಬಹಿರಂಗವೂ ಆಗುತ್ತದೆ. ಆದರೆ ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದೂ ಈ ರೀತಿ ಯೋಚನೆ ಮಾಡಿಲ್ಲ. ಅವರು ಯಾವಾಗಲೂ ರಾಜ್ಯದ ಜನರ ಬಗ್ಗೆಯೇ ಯೋಚಿಸುತ್ತಾರೆ ಎಂದರು.
|
5 |
+
ಬಹಳಷ್ಟು ಮಂದಿ ಹೊಂದಾಣಿಕೆ ಮಾಡಿಕೊಂಡು ಒಳ್ಳೆಯ ಸ್ಥಾನದಲ್ಲಿದ್ದಾರೆ. ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್ಮೆಂಟ್ ಸಂಸ್ಕೃತಿಯೂ ಇಲ್ಲ ಎಂದು ಹೇಳಿದರು. ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಂತ್ರಸ್ತ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಸರಿಯಲ್ಲ.
|
6 |
+
ಪೆನ್ಡ್ರೈವ್ ಸೋರಿಕೆ ಮಾಡಿದವರ ಬಗ್ಗೆ ಏಕೆ ತನಿಖೆಯಾಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆ ಎಂಬುದನ್ನು ಪತ್ತೆ ಹಚ್ಚಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿರುವುದು ಸರ್ಕಾರದ ಕರ್ತವ್ಯ. ಪಾರದರ್ಶಕ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಈ ಪ್ರಕರಣದಲ್ಲಿ ಆರೋಪ ಕೇಳಿಬಂದಿರುವ ಎಲ್ಲರೂ ಎಸ್ಐಟಿ ತನಿಖೆ ಎದುರಿಸಬೇಕು ಎಂದರು.
|
eesanje/url_46_139_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮಾಜಿ ಸಂಸದ ಶಿವರಾಮೇಗೌಡ ಮನೆ ಬಳಿ ಮೊಟ್ಟೆ ಎಸೆದು ಪರಾರಿಯಾದ ಗುಂಪು
|
2 |
+
ಬೆಂಗಳೂರು, ಮೇ 20-ಪೆನ್ಡ್ರೈವ್ ಪ್ರಕರಣ ಸಂಬಂಧ ಆಡಿಯೋವೊಂದರಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಶಿವರಾಮೇಗೌಡ ಅವರ ಮನೆ ಬಳಿ ಬಂದ ಗುಂಪೊಂದು ಮೊಟ್ಟೆ ಎಸೆದು ಪರಾರಿಯಾಗಿದೆ.
|
3 |
+
ಸಂಸದ ಪ್ರಜ್ವಲ್ ಅವರಿಗೆ ಸೇರಿದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣ ಸಂಬಂಧ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ ಶಿವರಾಮೇಗೌಡ ಅವರ ನಡುವಿನ ಆಡಿಯೋ ಸಂಭಾಷಣೆಯಲ್ಲಿ ದೇವೇಗೌಡರ ಬಗ್ಗೆ ಶಿವರಾಮೇಗೌಡ ಅವಹೇಳನಕಾರಿ ನಿಂದಿಸಿದ್ದಾರೆ ಎನ್ನಲಾಗಿದೆ.
|
4 |
+
ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯ ಬನಗಿರಿಯಲ್ಲಿ ವಾಸವಿರುವ ಶಿವರಾಮೇಗೌಡ ಅವರ ಮನೆ ಬಳಿ ತಡರಾತ್ರಿ 11.30ರ ಸುಮಾರಿನಲ್ಲಿ ಕಾರಿನಲ್ಲಿ ಬಂದ ಗೊಂಪೊಂದು ಮನೆ ಮೇಲೆ ಮೊಟ್ಟೆ ಎಸೆಯಲು ಯತ್ನಿಸಿದೆ. ಆ ವೇಳೆ ಪೊಲೀಸರನ್ನು ಕಂಡು ತಂದಿದ್ದ ಮೊಟ್ಟೆಗಳನ್ನು ಅವರ ಕಣ್ತಪ್ಪಿಸಿ ಮನೆ ಮುಂದೆ ಎಸೆದು ಪರಾರಿಯಾಗಿದೆ.
|
5 |
+
ಈ ಬಗ್ಗೆ ಸಿ.ಕೆ.ಅಚ್ಚು ಕಟ್ಟು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಮೊಟ್ಟೆ ಎಸೆದು ಹೋದವರಿಗಾಗಿ ಶೋಧ ನಡೆಸುತ್ತಿದ್ದಾರೆ.ಶಿವರಾಮೇಗೌಡ ಮನೆ ರಸ್ತೆಯ ಎರಡು ಕಡೆ ಬ್ಯಾರಿಕೇಡ್ ಹಾಕಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
|
eesanje/url_46_139_3.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
“ಕರ್ನಾಟಕದಿಂದ ಯಾರೂ ಪ್ರಧಾನಿ ಹುದ್ದೆಯ ರೇಸ್ನಲ್ಲಿಲ್ಲ” : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು, ಮೇ 20-ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಿಂದ ಪ್ರಧಾನಿ ಹುದ್ದೆಗೆ ಯಾರೂ ಆಕಾಂಕ್ಷಿಗಳಿಲ್ಲ ಎಂದು ಸ್ಪಷ್ಟಪಡಿಸಿದರು.
|
3 |
+
ಪ್ರೆಸ್ಕ್ಲಬ್ನಲ್ಲಿಂದು ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಗುಜರಾತಿನ ಮಾದರಿಯನ್ನು ಮುಂದಿಟ್ಟುಕೊಂಡು ನರೇಂದ್ರ ಮೋದಿ ದೇಶದ ಪ್ರಧಾನಿಯಾದಂತೆ ಕರ್ನಾಟಕದ ಮಾದರಿಯನ್ನು ಪ್ರಸ್ತಾಪಿಸಿ ರಾಜ್ಯದಿಂದ ಪ್ರಧಾನಿ ಹುದ್ದೆಯ ರೇಸ್ನಲ್ಲಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಿಂದ ಯಾರೂ ಪ್ರಧಾನಿ ಹುದ್ದೆಯ ರೇಸ್ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.
|
4 |
+
ತಮ್ಮ 1 ವರ್ಷಗಳ ಸರ್ಕಾರದ ಸಾಧನೆಯೆಂದರೆ ತಕ್ಷಣವೇ ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದಕ್ಕಾಗಿ 2023-24 ರಲ್ಲಿ 36 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ಮುಂದಿನ ವರ್ಷಕ್ಕೆ 52 ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ.
|
5 |
+
ಶಕ್ತಿ ಯೋಜನೆಯಡಿ 201 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 4.10 ಕೋಟಿ ಫಲಾನುಭವಿಗಳಿಗೆ 5,754 ಕೋಟಿ ರೂ.ಗಳನ್ನು ಬ್ಯಾಂಕ್ ಖಾತೆಗೆ ಜಮಾಗೊಳಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 1.60 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ಗಾಗಿ 7,436 ಕೋಟಿ ರೂ. ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.20 ಕೊಟಿ ಯಜಮಾನಿಯರಿಗೆ 20,293 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದ್ದು, ಯುವನಿಧಿಯಡಿ 1,57,255 ನೋಂದಣಿಯಾಗಿದ್ದಾರೆ ಎಂದು ಹೇಳಿದರು.
|
6 |
+
ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವುದರ ಜೊತೆಗೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಕಳೆದ ಬಜೆಟ್ನಲ್ಲಿ 54 ಸಾವಿರ ಕೋಟಿ ರೂ.ಗಳ ಬಂಡವಾಳ ವೆಚ್ಚದ ಬದಲಾಗಿ 56 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ನೀರಾವರಿಗೆ 14,369 ಕೋಟಿ ರೂ.ಗಳ ಬದಲಾಗಿ 18,198 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಶೇ.99.20 ಯಷ್ಟು ಅನುದಾನ ಬಳಕೆಯಾಗಿದೆ.
|
7 |
+
ರಾಜ್ಯಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಅಪಪ್ರಚಾರದಲ್ಲಿ ಯಾವುದೇ ಹುರುಳಿಲ್ಲ. ಆರ್ಥಿಕವಾಗಿ ಸಬಲವಾಗಿರುವುದಕ್ಕಾಗಿಯೇ ಪಂಚಖಾತ್ರಿಗಳು ಮತ್ತು ಯೋಜನಾ ವೆಚ್ಚಗಳನ್ನು ಹಿಂದಿನ ಸರ್ಕಾರಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದರು.
|
8 |
+
ಪರಿಶಿಷ್ಟರ ಬಗ್ಗೆ ಕಾಳಜಿ ವಹಿಸುವ ಪ್ರಧಾನಮಂತ್ರಿಯವರು ದೇಶಾದ್ಯಂತ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಎಸ್ಇಪಿ ಮತ್ತು ಟಿಎಸ್ಪಿ ಕಾಯ್ದೆಯನ್ನು ಏಕೆ ಜಾರಿಗೊಳಿಸಲಿಲ್ಲ? ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ನೀಡಲಾಗುತ್ತಿದೆ ಎಂದು ಪ್ರಧಾನಿಯವರು ಅಪ್ಪಟ ಸುಳ್ಳು ಹೇಳುತ್ತಿದ್ದಾರೆ. ಹಿಂದಿನ ಬೊಮಾಯಿ ಅವರ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಸುಪ್ರೀಂಕೋರ್ಟ್ನ ವಿಚಾರಣೆ ವೇಳೆ ಯಥಾಸ್ಥಿತಿಯನ್ನು ಮುಂದುವರೆಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದೆ. ಈವರೆಗೂ ಅದೇ ವ್ಯವಸ್ಥೆ ಮುಂದುವರೆದಿದೆ ಎಂದರು.
|
9 |
+
ರಾಜಕೀಯ ಮತ್ತು ಮತಗಳಿಕೆಗೆ ಜನರನ್ನು ದಿಕ್ಕು ತಪ್ಪಿಸುವ ಸತ್ಯಕ್ಕೆ ದೂರವಾದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.ಭ್ರಷ್ಟಾಚಾರ ನಿರ್ಮೂಲನೆಗೆ ತಮ ಸರ್ಕಾರ ಬದ್ಧವಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್ಐ ನೇಮಕಾತಿ ಅಕ್ರಮ ಕೋವಿಡ್ ಸಂದರ್ಭದಲ್ಲಿ ನಡೆದ ಖರೀದಿ ಅವ್ಯವಹಾರ ಶೇ.40 ರಷ್ಟು ಕಮಿಷನ್ ದೂರ ಸೇರಿದಂತೆ ಹಲವು ದೂರುಗಳ ತನಿಖೆಗೆ ವಿಚಾರಣಾ ಆಯೋಗ ರಚಿಸಲಾಗಿದೆ. ಪಿಎಸ್ಐ ಹಗರಣದ ವರದಿ ಬಂದಿದ್ದು, ಉಳಿದೆರೆಡು ಹಗರಣಗಳ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
|
10 |
+
ಹುಬ್ಬಳ್ಳಿ ಹಾಗೂ ಕೊಡಗಿನಲ್ಲಿ ನಡೆದ ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಂದೆ ಇಂತಹ ಘಟನೆಗಳು ಮರುಕಳುಸದಂತೆ ಎಚ್ಚರಿಕೆ ವಹಿಸಲಾಗಿದೆ. ಹುಬ್ಬಳ್ಳಿ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ವಿಭಾಗದ ಡಿಸಿಪಿಗಳು, ಡಿವೈಎಸ್ಪಿಗಳು ಹಾಗೂ ಇನ್ಸ್ ಪೆಕ್ಟರ್ಗಳನ್ನು ಅಮಾನತುಗೊಳಿಸಲಾಗಿದೆ ಎಂದು ವಿವರಿಸಿದರು.
|
11 |
+
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲಾಗಿದೆ. ಅದರ ಅನುಷ್ಠಾನದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಒಂದು ವೇಳೆ ತೊಂದರೆಯಾದರೆ ಅದನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
|
12 |
+
ದೇಶದಲ್ಲಿ ಇಡಬ್ಲ್ಯೂಎಸ್ ಜಾರಿ ಬಳಿಕ ಎಲ್ಲಾ ಸಮುದಾಯಗಳಿಗೂ ಮೀಸಲಾತಿ ದೊರೆಯುತ್ತಿದೆ. ಈ ಹಂತದಲ್ಲಿ ಯಾರೂ ಕೂಡಾ ಮೀಸಲಾತಿ ವಿರುದ್ಧವಾಗಿ ಮಾತನಾಡುವುದು ಅರ್ಥಹೀನ ಎಂದು ಹೇಳಿದರು.ಪೆನ್ಡ್ರೈವ್ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಇದರಲ್ಲಿ ಯಾವುದೇ ರಾಜಕೀಯ ಷಡ್ಯಂತ್ರವಿಲ್ಲ. ಪೆನ್ಡ್ರೈವ್ ಇದೆ ಎಂದು ದೇವರಾಜೇಗೌಡ ವರ್ಷದ ಹಿಂದೆಯೇ ಹೇಳಿಕೊಂಡಿದ್ದರು. ವಿಡಿಯೋಗಳು ಬಹಿರಂಗಗೊಳ್ಳುತ್ತಿದ್ದಂತೆ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾದರು. ಇದರಲ್ಲಿ ಷಡ್ಯಂತ್ರ ಇದೆ ಎನ್ನುವುದೇ ಆದರೆ ಜನತಾದಳದವರು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದೇಕೆ? ವಿಷಯ ಗೊತ್ತಿದ್ದೂ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದೇಕೆ? ಅವರ ಪರವಾಗಿ ಪ್ರಚಾರ ಮಾಡಿದ್ದೇಕೆ? ಎಂದು ಹಲವು ಪ್ರಶ್ನೆಗಳನ್ನು ಮುಂದಿಟ್ಟ ಮುಖ್ಯಮಂತ್ರಿಗಳು, ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡಲಾಗುತ್ತಿರುವ ಆಡಿಯೋ ಆರೋಪ ಸೇರಿದಂತೆ ಯಾವುದಕ್ಕ�� ಸಾಕ್ಷ್ಯಗಳಿಲ್ಲ ಎಂದು ಸಮರ್ಥಿಸಿಕೊಂಡರು.
|
13 |
+
ಬರ ಪರಿಹಾರ ಪಾವತಿ ವಿಷಯದಲ್ಲಿ ಬಿಜೆಪಿ ನಾಯಕರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದರು. ಕಾನೂನು ಸಂಘರ್ಷದ ಮೂಲಕ ಪರಿಹಾರ ಪಡೆದುಕೊಳ್ಳಲಾಗಿದೆ. ರೈತರಿಗೆ ವಿತರಿಸುತ್ತಿದ್ದೇವೆ. ಮುಂದಿನ ಹಂತದಲ್ಲೂ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು.
|
14 |
+
ಇಂಡಿಯಾ ಮೈತ್ರಿಕೂಟದ ಲೇವಡಿ ಮಾಡುವ ಪ್ರಧಾನಿಯವರು ಎನ್ಡಿಎ ಮೈತ್ರಿಕೂಟ ಮಾಡಿಕೊಂಡಿದ್ದೇಕೆ? ಗೆಲ್ಲುವ ವಿಶ್ವಾಸವಿದ್ದಿದ್ದರೆ ಏಕಾಂಗಿಯಾಗಿಯೇ ಸ್ಪರ್ಧಿಸಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.
|
15 |
+
ಮುಖ್ಯಮಂತ್ರಿಯವರ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಜೀರ್ ಅಹಮದ್, ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರೆಸ್ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಬಿ.ಟಿ.ಮಲ್ಲಪ್ಪ, ಉಪಾಧ್ಯಕ್ಷ ಆನಂದ್ ಬೈದನನೆ, ಕಾರ್ಯದರ್ಶಿ ದೊಡ್ಡಬೊಮಯ್ಯ, ಖಜಾಂಚಿ ಮೋಹನ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_139_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ದೇವೇಗೌಡರ ವಿರುದ್ಧ ಶಿವರಾಮೇಗೌಡ ಅವಹೇಳನಕಾರಿ ಹೇಳಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ
|
2 |
+
ಬೆಂಗಳೂರು, ಮೇ 20– ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಮಾಜಿ ಸಂಸದ ಶಿವರಾಮೇಗೌಡ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಜೆಡಿಎಸ್ ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ನಡೆಸಿತು. ಬೆಂಗಳೂರು ಮಹಾನಗರ ಜೆಡಿಎಸ್ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಿವರಾಮೇಗೌಡ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
|
3 |
+
ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲು ಶಿವರಾಮೇಗೌಡರಿಗೆ ಡಿ.ಕೆ.ಶಿವಕುಮಾರ್ ಕುಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಯಿತು. ಶಿವರಾಮೇಗೌಡ ಹಾಗೂ ಶಿವಕುಮಾರ್ ವಿರುದ್ಧ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಲಾಯಿತು.
|
4 |
+
ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ಗೌಡ, ಪಕ್ಷದ ಮುಖಂಡರಾದ ಟಿ.ಎನ್.ಜವರಾಯಿಗೌಡ, ಗೋಪಾಲ್, ರೇವಣ್ಣ, ಶೈಲಾ, ಕನ್ಯಾಕುಮಾರಿ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಲ್ಲದೆ ಶಿವರಾಮೇಗೌಡರ ಪ್ರತಿಕೃತಿ ದಹಿಸಲಾಯಿತು.
|
5 |
+
ವಕೀಲ ದೇವರಾಜೇಗೌಡರೊಂದಿಗೆ ದೂರವಾಣಿಯಲ್ಲಿ ಮಾತನಾಡುವಾಗ ಶಿವರಾಮೇಗೌಡ ಅವರು ದೇವೇಗೌಡರ ಬಗ್ಗೆ ಅವಹೇಳನಕಾರಿ ರೀತಿ ಮಾತನಾಡಿರುವುದನ್ನು ಖಂಡಿಸಲಾಯಿತು.
|
eesanje/url_46_139_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸೋಮಾರಿ ಸಿಎಂ ಸಿದ್ದರಾಮಯ್ಯ : ನಟ ಚೇತನ್ ವಂಗ್ಯ
|
2 |
+
ಬೆಂಗಳೂರು,ಮೇ20-ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ಅನೀಹಿಲೇಷನ್ ಆಫ್ಕಾಸ್ಟ್ ಕೃತಿಯ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆಯಾಗಿ ಕೊಟ್ಟಿರುವುದಕ್ಕೆ ನಟ ಚೇತನ್ ವಂಗ್ಯವಾಡಿದ್ದಾರೆ.
|
3 |
+
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ಅನೀಹಿಲೇಷನ್ ಆಫ್ ಕಾಸ್ಟ್ ಕೃತಿಯ ಪ್ರತಿಯನ್ನು ಸಿಎಂ ಸೋಮಾರಿ ಸಿದ್ದು ನೀಡಿದ್ದಾರೆ. ಎಷ್ಟು ವಿಪರ್ಯಾಸ ಎಂದು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಟೀಕಿಸಿದ್ದಾರೆ.
|
4 |
+
ಅಂಬೇಡ್ಕರ್ ಅವರ ಕಾಲದಲ್ಲಿ ಅವರ ಅತಿದೊಡ್ಡ ರಾಜಕೀಯ ಶತ್ರು ಕಾಂಗ್ರೆಸ್ ಪಕ್ಷ (ರಾಜಕೀಯ ಹಿಂದೂ ಧರ್ಮ), ಇಂದಿನ ಕಾಂಗ್ರೆಸ್ ಪಕ್ಷ (ಅದೇ ಮನುವಾದ) ಅಂಬೇಡ್ಕರ್ ಅವರನ್ನು ಚುನಾವಣಾ ಲಾಭಕ್ಕಾಗಿ ಅಪಹರಿಸಲು ಪ್ರಯತ್ನಿತ್ತದೆ. ಗಾಂಧಿಯವರ 36 ಬ್ರಾಹಣ್ಯದ ಪುಸ್ತಕಗಳಲ್ಲಿ ಒಂದನ್ನು ಸಿಎಂ ಈ ಇಬ್ಬರು ವಿದ್ಯಾರ್ಥಿಗಳಿಗೆ ನೀಡಬೇಕಿತ್ತು, ಇದು ಸೈದ್ಧಾಂತಿಕವಾಗಿ ಹೆಚ್ಚು ಪ್ರಾಮಾಣಿಕವಾದ ಉಡುಗೊರೆಯಾಗಿರುತ್ತಿತ್ತು ಎಂದು ಚೇತನ್ ಹೇಳಿದ್ದಾರೆ.
|
5 |
+
ಚೇತನ್ ಇಂಥ ಅಪ್ರಾಸಂಗಿಕ, ವಿವಾದಾತಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ವಕೀಲರೊಬ್ಬರು ಶೇಷಾದ್ರಿಪುರ ಠಾಣೆಯಲ್ಲಿ ಇವರ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ಚೇತನ್ ವಿರುದ್ಧ ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್ಸಿಆರ್) ದಾಖಲಿಸಿದ್ದರು.
|
eesanje/url_46_139_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಗ್ಯಾರಂಟಿಗಳನ್ನ ಬಿಟ್ರೆ ಇನ್ನೇನು ಸಾಧನೆ ಮಾಡಿದ್ದೀರಾ..? : ಕಾಂಗ್ರೆಸ್ ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ
|
2 |
+
ಬೆಂಗಳೂರು,ಮೇ20– ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಕಾಲ ಐಸಿಯುನಲ್ಲಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ಒಂದು ವರ್ಷ ಪೂರೈಸಿದೆ. 5 ಗ್ಯಾರಂಟಿಗಳನ್ನು ಹೊರತುಪಡಿಸಿದರೆ ಸರ್ಕಾರದ ಸಾಧನೆ ಇನ್ನೇನಿದೆ ಎಂದು ಪ್ರಶ್ನಿಸಿದರು.
|
3 |
+
ಐದು ಗ್ಯಾರಂಟಿಗಳ ಬಗ್ಗೆ ಮಾಧ್ಯಮದಲ್ಲಿ ಜಾಹಿರಾತು ನೀಡಿ ಪ್ರಚಾರ ಮಾಡಿದ್ದು ಒಂದು ಕಡೆಯಾದರೆ ಇನ್ನೊಂದು ಕಡೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿನಿತ್ಯ ಸಂಘರ್ಷ ಮಾಡಿದ್ದು ಮತ್ತೊಂದು ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು.
|
4 |
+
ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದು ಎಲ್ಲೂ ಕಾಣಲಿಲ್ಲ. ಇಂದೂ ಒಬ್ಬ ರೈತರು ಆತಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ ಎಂದರು.
|
5 |
+
ಬರ ಪರಿಹಾರಕ್ಕೆ ನೀಡಿದ್ದ ಹಣವನ್ನು ರೈತರು ಪಡೆದಿದ್ದ ಸಾಲಕ್ಕೆ ವಜಾ ಹಾಕುತ್ತಿರುವುದು ಕೇಳಿಬರುತ್ತಿದೆ. ಹಾಲು ಉತ್ಪಾದಕರಿಗೆ ನೀಡಬೇಕಾದ ಪ್ರೋತ್ಸಾಹಧನ 600ರಿಂದ 700 ಕೋಟಿ ರೂ. ಪಾವತಿಯಾಗಿಲ್ಲ. ಹಲವು ಇಲಾಖೆಗಳಲ್ಲಿ ಎರಡುಮೂರು ತಿಂಗಳಿನಿಂದ ಸಂಬಳವನ್ನೇ ಕೊಟ್ಟಿಲ್ಲ. ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಎಷ್ಟು ಸಭೆ ನಡೆಸಿ ಅಧಿಕಾರಿಗಳಿಗೆ ಆಡಳಿತ ಹಾಗೂ ಅಭಿವೃದ್ಧಿಯ ಪ್ರಗತಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
|
eesanje/url_46_139_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್ ರಿಲೀಫ್
|
2 |
+
ಬೆಂಗಳೂರು,ಮೇ20-ಹಾಸನ ಜಿಲ್ಲೆ ಹೊಳೆನರಸೀಪುರದ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನ್ಯಾಯಾಲಯದ ಷರತ್ತುಬದ್ಧ ಜಾಮೀನು ನೀಡಿದೆ.
|
3 |
+
ಕಾಯ್ದಿರಿಸಿದ್ದ ತೀರ್ಪನ್ನು ಸೋಮವಾರ ಪ್ರಕಟಿಸಿದ ಬೆಂಗಳೂರು 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಮೂರ್ತಿ ಜೆ.ಪ್ರೀತ್ ಅವರು 5 ಲಕ್ಷ ಬಾಂಬ್ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿತು.
|
4 |
+
ಈಗಾಗಲೇ ರೇವಣ್ಣ ಅವರಿಗೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನಲ್ಲಿ ಮಹಿಳೆ ಅಪಹರಣ ಮತ್ತು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು. ಇದೀಗ ಎರಡೂ ಪ್ರಕರಣಗಳಲ್ಲಿ ರೇವಣ್ಣಗೆ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿರುವ ಕಾರಣ ಸದ್ಯ ಅವರು ಪೊಲೀಸ್ ಬಂಧನದಿಂದ ಮುಕ್ತರಾಗಿದ್ದಾರೆ.
|
5 |
+
ಕಳೆದ ಶುಕ್ರವಾರ ರೇವಣ್ಣ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ನಾಗೇಶ್ ಅವರು, ತಮ್ಮ ಕಕ್ಷಿದಾರರ ಮೇಲೆ ಪೊಲೀಸರು ದಾಖಲಿಸಿರುವ ಪ್ರಕರಣಗಳಲ್ಲಿ ಎಲ್ಲವೂ ಜಾಮೀನು ನೀಡುವಂತಹ ಪ್ರಕರಣಗಳಾಗಿವೆ. ಅವರು ತನಿಖೆಗೆ ಸಹಕಾರ ನೀಡುತ್ತಿದ್ದು, ಎಲ್ಲಿಯೂ ವಿಚಾರಣೆಗೆ ಗೈರು ಹಾಜರಾಗಿಲ್ಲ ಎಂದು ಸಮರ್ಥಿಸಿಕೊಂಡರು.
|
6 |
+
ಮೇಲ್ನೋಟಕ್ಕೆ ಈ ಪ್ರಕರಣವು ರಾಜಕೀಯ ಪ್ರೇರಿತದಂತೆ ಕಾಣುತ್ತಿದೆ. ಸಂತ್ರಸ್ತೆ ಮಹಿಳೆಯು ಬರೆಯಲು ಬಾರದೆ ಇರುವಾಗ ಅದ್ಹೇಗೆ ಕಂಪ್ಯೂಟರ್ನಲ್ಲಿ ಬರೆಯುತ್ತಾರೆ ಎಂದು ಪ್ರಶ್ನೆ ಮಾಡಿದ್ದರು.
|
eesanje/url_46_139_8.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನುಡಿದಂತೆ ನಡೆದಿದ್ದೇವೆ, ಒಂದು ವರ್ಷ ಪೂರೈಸಿದ್ದೇವೆ : ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು, ಮೇ 20-ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಆದರೆ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಸೇರಿ ನಮ್ಮ ಬಲ ಕುಗ್ಗಿಸಲು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
|
3 |
+
ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.
|
4 |
+
ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ.ಭ್ರಷ್ಟಾಚಾರ, ದುರಾಡಳಿತ…../17yGeflgtr
|
5 |
+
ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ.
|
6 |
+
ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿ ಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ ಕೈಗಳ ಬಲ ಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ.
|
7 |
+
ಇಂತಹ ಸವಾಲುಗಳ ನಡುವೆಯೂ ನಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು ಎಂದಿದ್ದಾರೆ.
|
8 |
+
ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸಗಳನ್ನಾಗಿ ಬಳಸಿಕೊಂಡು ನಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ.
|
9 |
+
ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದ್ದೆಿವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ��ುಡಿದಂತೆಯೇ ನಡೆಯುವೆವು ಎಂದು ಭರವಸೆ ನೀಡಿದ್ದಾರೆ.
|
eesanje/url_46_139_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
“ಕರ್ನಾಟಕದ ಕಾನೂನು ಸುವ್ಯವಸ್ಥೆ ಉಳಿಸುವ ದಕ್ಷ ಗೃಹಸಚಿವರು ಬೇಕಾಗಿದ್ದಾರೆ” : ಯತ್ನಾಳ್
|
2 |
+
ಬೆಂಗಳೂರು,ಮೇ20-ಕರ್ನಾಟಕದ ಕಾನೂನು ಸುವ್ಯವಸ್ಥೆ ಉಳಿಸುವ ದಕ್ಷ ಗೃಹಸಚಿವರು ಬೇಕಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯಭರಿತವಾಗಿ ಟ್ವೀಟ್ ಮಾಡಿದ್ದಾರೆ.
|
3 |
+
ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಕುರ್ಚಿಗೆ ಭಾವಚಿತ್ರವನ್ನು ಅಂಟಿಸಿ ದಕ್ಷ ಗೃಹಸಚಿವರು ಬೇಕಾಗಿದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಹಾಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಕಾಲೆಳೆದಿದ್ದಾರೆ. ಸಮಾಜದಲ್ಲಿ ಅಶಾಂತಿ, ಗಲಭೆ, ಬೆದರಿಕೆ, ಕೊಲೆ, ಅತ್ಯಾಚಾರ, ಅನೀತಿ, ಅನ್ಯಾಯ, ಕೃತ್ಯಗಳನ್ನು ಹತ್ತಿಕ್ಕಲು ಓರ್ವ ದಕ್ಷ ಸಮರ್ಥ ಗೃಹಮಂತ್ರಿ ಬೇಕಾಗಿದ್ದಾರೆ ಎಂದು ಹಾಲಿ ಸಚಿವರ ಕಾರ್ಯವೈಖರಿಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
|
4 |
+
ಆಸಕ್ತರು ಅರ್ಜಿ ಸಲ್ಲಿಸಿಕರ್ನಾಟಕದ ಕಾನೂನು ಸುವ್ಯವಸ್ಥೆ ಉಳಿಸಿ../
|
5 |
+
ಕಠಿಣ ಕ್ರಮ, ಕಾನೂನು ರೀತ್ಯ ಕ್ರಮ ಈ ಪದಪುಂಜಗಳನ್ನು ಬಿಟ್ಟು ಪಾತಕಿಗಳಿಗೆ ಅರ್ಥವಾಗುವ ಭಾಷೆಯಲ್ಲಿ ಕಾರ್ಯ ನಿರ್ವಹಿಸಬೇಕು. ಅವರು ನಮ ಬ್ರದರ್ಸ್, ಸಿಸ್ಟರ್ಸ್ ಎಂದು ಓಲೈಕೆ ರಾಜಕಾರಣ ಮಾಡಬಾರದು ಉಡಾಫೆ ಮಾತುಗಳನ್ನು ಆಡಮಾರದೆಂದು ಮನವಿ ಮಾಡಿದ್ದಾರೆ.
|
6 |
+
ಹಾರಿಕೆ ಉತ್ತರಗಳನ್ನು ಬಿಟ್ಟು ಗಂಭೀರವಾಗಿ ಕೆಲಸ ನಿರ್ವಹಿಸಬೇಕು, ದೇಶ ಮೊದಲು ಎಂಬ ಭಾವನೆ ಇರಬೇಕು. ಹಿರಿಯ ಅಧಿಕಾರಿಗಳಿಗೆ/ಜನರಿಗೆ ಏಕವಚನವನ್ನು ಬಳಸದಿರುವುದು ಪೊಲೀಸ್ ಇಲಾಖೆ/ಗುಪ್ತಚರ ಇಲಾಖೆಯನ್ನು ಕಾರ್ಪರೇಟ್ ಮಾದರಿ ನಡೆಸುವ ಚಾಕಚಕ್ಯತೆ, ಕಾನೂನುಬಾಹಿರ ಚಟುವಟಿಕೆಗಳಿಗೆ ಶೂನ್ಯ ಸಹಿಷ್ಣುತೆ ಇರಬೇಕು ಎಂದು ಸಲಹೆ ಮಾಡಿದ್ದಾರೆ.
|
7 |
+
ಮೇಲ್ಕಂಡ ಕಾರ್ಯವೈಖರಿ, ವ್ಯಕ್ತಿತ್ವವಿರುವ ಶಾಸಕರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ ಸ್ವವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಕಳುಹಿಸಬಹುದು ಎಂದು ಟೀಕೆ ಮಾಡಿದ್ದಾರೆ.
|
eesanje/url_46_13_1.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅಮೆರಿಕಾದಲ್ಲಿ ಮೀಸಲಾತಿ ಕುರಿತು ಹೇಳಿಕೆ : ರಾಹುಲ್ ವಿರುದ್ಧ ಬಿಜೆಪಿ ದೂರು
|
2 |
+
:
|
3 |
+
ಬೆಂಗಳೂರು,ಸೆ.21-ಮೀಸಲಾತಿ ಕುರಿತು ಅಮೆರಿಕದ ಸಂವಾದದಲ್ಲಿ ಹೇಳಿಕೆ ನೀಡಿದ್ದ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮೇಲೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದೆ.
|
4 |
+
ವಿಧಾನಪರಿಷತ್ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಧಾನಪರಿಷತ್ನ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಬಸವರಾಜ್ ಮತ್ತಿಮೋಡ, ಮಾಜಿ ಶಾಸಕ ರಾಜ್ಕುಮಾರ್ ತೇಲ್ಕೂರ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಚ್.ವಿ.ಮಂಜುನಾಥ್, ಬಿಜೆಪಿ ಕಾನೂನು ಪ್ರಕೋಷ್ಟದ ಸಂಚಾಲಕ ವಸಂತ್ಕುಮಾರ್, ಶಾಸಕರು, ಮಾಜಿ ಶಾಸಕರ ನೇತೃತ್ವದಲ್ಲಿ ದೂರು ದಾಖಲಿಸಲಾಗಿದೆ.
|
5 |
+
ರಾಹುಲ್ ಗಾಂಧಿಯವರು ಮೀಸಲಾತಿ ಕುರಿತಂತೆ ನೀಡಿರುವ ಹೇಳಿಕೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ಹಿಂದುಳಿದ ಸಮುದಾಯದಲ್ಲಿ ಆತಂಕ ಉಂಟಾಗಿದೆ. ಮೀಸಲಾತಿ ರದ್ದುಪಡಿಸುತ್ತೇವೆ ಎಂದು ಹೇಳಿರುವುದು ಸಂವಿಧಾನ ವಿರೋಧಿ ನಡೆಯಾಗಿದ್ದು, ಅವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
|
6 |
+
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ರಾಹುಲ್ ಗಾಂಧಿ ಮೀಸಲಾತಿಯನ್ನು ರದ್ದುಪಡಿಸುತ್ತೇವೆ ಎಂದು ಹೇಳಿರುವುದು ಸಂವಿಧಾನ ವಿರೋಧಿ ನಡೆ. ಅವರು ಲೋಕಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದು, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
|
7 |
+
ರಾಹುಲ್ ಗಾಂಧಿಯವರು ವಿದೇಶದಲ್ಲಿ ಕುಳಿತ ಭಾರತಕ್ಕೆ ಅಪಮಾನ ಆಗುವ ರೀತಿಯಲ್ಲಿ ಮಾತನಾಡಿದ್ದಾರೆ. ನಾವು ಅವರು ಪ್ರಬುದ್ಧರಾಗಿದ್ದಾರೆ ಅಂತ ಅಂದುಕೊಂಡಿದ್ದೆವು. ಆದರೆ ಈ ಮಾತುಗಳನ್ನ ಕೇಳಿದಾಗ ಪ್ರಬುದ್ಧರಾಗಿಲ್ಲ ಎಂಬುದು ಸ್ಪಷ್ಟವಾಗಿದೆ.
|
8 |
+
ಇಂದಿರಾಗಾಂಧಿಯವರು ಪ್ರಧಾನಿಯಾಗಿ ವಿದೇಶಕ್ಕೆ ಹೋದಾಗ ಅಲ್ಲಿಯ ಸಂದರ್ಶಕರು ಜೈಲಿಗೆ ಹೋದಾಗ ನಿಮ ಅನುಭವ ಹೇಗಿತ್ತೆಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ಅದು ನನ್ನ ದೇಶದ ವಿಚಾರ ಅದನ್ನುನನ್ನ ದೇಶದಲ್ಲಿಯೇ ಮಾತನಾಡುತ್ತೇನೆ ಎಂದಿದ್ದರು. ಆದರೆ ರಾಹುಲ್ ಗಾಂಧಿಯವರು ಅವರ ಅಜ್ಜಿಯಿಂದಲೂ ಕಲಿತಿಲ್ಲ. ಹೀಗಾಗಿ ನಾವು ರಾಹುಲ್ ಗಾಂಧಿಯವರ ವಿರುದ್ಧ ದೂರು ದಾಖಲು ಮಾಡಿದ್ದೇವೆ ಎಂದು ಹೇಳಿದರು.
|
9 |
+
ಐಟಿ ಆಕ್ಟ್ ಕೆಳಗಡೆ ಅಪರಾಧ ದೇಶದ ಬಗ್ಗೆ ವಿದೇಶದಲ್ಲಿ ಕೂತು ಅಪಮಾನದ ಮಾತುಗಳನ್ನ ಹಾಡಿದ್ದಾರೆ. ಇದು ಜಾಮೀನು ರಹಿತ ಪ್ರಕರಣವಾಗಿದೆ. ಹೀಗಾಗಿ ದೂರು ದಾಖಲಿಸಿದ್ದೇವೆ. ಕೂಡಲೇ ಅವರನ್ನು ಬಂಧಿಸುವಂತೆ ನಿಯೋಗ ಒತ್ತಡ ಹಾಕಿದೆ ಎಂದರು.
|
eesanje/url_46_13_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಗುಜರಿಗೆ ಹಾಕುವ ವಾಹನಗಳ ದಂಡದ ವಿನಾಯ್ತಿ 2 ವರ್ಷ ವಿಸ್ತರಣೆ
|
2 |
+
2
|
3 |
+
ಬೆಂಗಳೂರು, ಸೆ.21-ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಪಡಿಸಲು ಉದ್ದೇಶಿಸುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿನ ದಂಡಗಳನ್ನು ಒಂದು ಬಾರಿಗೆ ಮಾತ್ರ ವಿನಾಯಿತಿ ನೀಡುವ ಅವಧಿಯನ್ನು ಎರಡು ವರ್ಷಗಳ ಕಾಲ ವಿಸ್ತರಿಸಲಾಗಿದೆ.
|
4 |
+
ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಪಡಿಸಲು ಉದ್ದೇಶಿಸುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿನ ದಂಡಗಳನ್ನು ಸಾರಿಗೆ ಇಲಾಖೆಯ ಶಾಸನ ಕ್ರಮದ ಅಡಿಯಲ್ಲಿ ಹಾಗೂ ಪೊಲೀಸ್ ಇಲಾಖೆಯ ಸಂಚಾರ ನಿಯಮ ಉಲ್ಲಂಘನೆಯಡಿಯಲ್ಲಿ ದಾಖಲಾದ ಪ್ರಕರಣದ ದಂಡಗಳಿಗೆ ಮಾತ್ರ ಸೀಮಿತಗೊಳಿಸಿ ದಂಡಗಳ ವಸೂಲಾತಿಯಿಂದ ಒಂದು ವರ್ಷದ ವರೆಗೆ ಮಾತ್ರ ವಿನಾಯಿತಿ ನೀಡಿರುವ ಅವಧಿಯನ್ನು 2026ರ ಮಾರ್ಚ್ 31ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
|
5 |
+
ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ಪಾಲಿಸಿ-2022ರ ಯೋಜನೆಯಡಿ ಈ ವಿನಾಯಿತಿಯು 2023ರ ಸೆಪ್ಟೆಂಬರ್ 26ರಿಂದ ಜಾರಿಗೆ ಬಂದಿದೆ. 15 ವರ್ಷಗಳನ್ನು ಪೂರೈಸಿರುವ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆ ಮೊದಲಾದವುಗಳಲ್ಲಿ ಇರುವ 5000 ವಾಹನಗಳನ್ನು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ ಹಂತ ಹಂತವಾಗಿ ನಾಶಪಡಿಸಲು ಅನುಮೋದನೆ ನೀಡಿದ್ದು, ಮೊದಲಿಗೆ ಅತಿ ಹೆಚ್ಚು ವರ್ಷಗಳನ್ನು ಪೂರೈಸಿರುವ ವಾಹನಗಳನ್ನು ನಾಶಪಡಿಸಲು ಆದೇಶಿಸಲಾಗಿದೆ.
|
6 |
+
ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯವು ವಿವಿಧ ರಾಜ್ಯಗಳು ವಾಹನಗಳ ಮೇಲಿನ ಬಾಕಿ ಇರುವ ದಂಡಗಳ ವಸೂಲಾತಿಯಿಂದ ವಿನಾಯಿತಿ ನೀಡಿರುವ ಅವಧಿಯು ಸೆಪ್ಟೆಂಬರ್ನಲ್ಲಿ ಮುಕ್ತಾಯುವಾಗುತ್ತದೆ. ವಾಹನಗಳ ಸ್ಕ್ರ್ಯಾಪಿಂಗ್ ಪಾಲಿಸಿಯ ಅನುಷ್ಠಾನವು ಇನ್ನೂ ರೂಪುಗೊಳ್ಳುವಿಕೆಯ ಹಂತದಲ್ಲಿರುವುದರಿಂದ ಈ ಸೌಲಭ್ಯಗಳನ್ನು 2026ರ ಮಾರ್ಚ್ವರೆಗೆ ವಿಸ್ತರಿಸುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
|
eesanje/url_46_13_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ 32 ಸ್ವಯಂ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರ
|
2 |
+
32
|
3 |
+
ಬೆಂಗಳೂರು, ಸೆ.21-ರಾಜ್ಯದ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುವ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ಯೋಜನೆಯ ಕುರಿತು ಟೆಂಡರ್ ಆಹ್ವಾನಿಸುವ ಹಾಗೂ ಅಂಗೀಕರಿಸುವ ಪ್ರಾಧಿಕಾರಗಳನ್ನು ಸಾರಿಗೆ ಇಲಾಖೆ ರಚಿಸಿದೆ.
|
4 |
+
ಅಪರ ಸಾರಿಗೆ ಆಯುಕ್ತರ(ಆಡಳಿತ) ಅಧ್ಯಕ್ಷತೆಯಲ್ಲಿ ಟೆಂಡರ್ ಆಹ್ವಾನ ಸಮಿತಿ ರಚಿಸಲಾಗಿದ್ದು, ಅಪರ ಸಾರಿಗೆ ಆಯುಕ್ತರು ಪ್ರವರ್ತನ(ದಕ್ಷಿಣ), ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಆಯುಕ್ತರು, ಬೆಂಗಳೂರು ನಗರ ಜಂಟಿ ಸಾರಿಗೆ ಆಯುಕ್ತರು, ಕೆ.ಆರ್.ಪುರಂನ ಪ್ರಾದೇಶಿಕ ಸಾರಿಗೆ ಅಧಿಕಾರಿ ಸದಸ್ಯರಾಗಿರುತ್ತಾರೆ. ಸಾರಿಗೆ ಆಯುಕ್ತರ ಕಚೇರಿಯ ಆರ್ಥಿಕ ಸಲಹೆಗಾರರನ್ನು ಸಮಿತಿಯ ಸದಸ್ಯರು ಹಾಗೂ ಸಂಚಾಲಕರನ್ನಾಗಿ ನೇಮಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
|
5 |
+
ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ ಅಧ್ಯಕ್ಷತೆಯಲ್ಲಿ ಟೆಂಡರ್ ಅಂಗೀಕಾರ ಸಮಿತಿ ರಚಿಸಿದ್ದು, ಅಪರ ಸಾರಿಗೆ ಆಯುಕ್ತರು ಪ್ರವರ್ತನ(ದಕ್ಷಿಣ) ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
|
6 |
+
ಅರ್ಹತಾ ಪತ್ರ ನವೀಕರಣಕ್ಕೆ ಬರುವ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು ಸಾರಿಗೆ ಇಲಾಖೆಯಲ್ಲಿ 13 ಸ್ಥಳಗಳಲ್ಲಿ ಡಿಸೈನ್ ಬಿಲ್ಡ್ ಫೈನಾನ್ಸ್ ಆಪರೇಟ್ ಮತ್ತು ಟ್ರಾನ್್ಸಫರ್ ಮಾದರಿಯಲ್ಲಿ ಮತ್ತು 19 ಸ್ಥಳಗಳಲ್ಲಿ ಬಿಲ್ಡ್ ಓನ್ ಆಪರೇಟ್ ಮಾದರಿಯಲ್ಲಿ ಸೇರಿದಂತೆ ಒಟ್ಟು 32 ಸ್ಥಳಗಳಲ್ಲಿ ಸ್ವಯಂ ಚಾಲಿತ ಪರೀಕ್ಷಾ ಕೇಂದ್ರಗಳನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲು ಆಡಳಿತಾತಕ ಅನುಮೋದನೆ ನೀಡಿ ಆದೇಶಿಸಲಾಗಿತ್ತು.
|
eesanje/url_46_13_12.txt
ADDED
@@ -0,0 +1,22 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ
|
2 |
+
|
3 |
+
ಬೆಂಗಳೂರು, ಸೆ.21-ಆಂಧ್ರಪ್ರದೇಶದ ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿಯ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲು ರಾಜ್ಯಸ ರ್ಕಾರ ಸೂಚನೆ ನೀಡಿದೆ.
|
4 |
+
ವಿಶೇಷವೆಂದರೆ ಶುಕ್ರವಾರವಷ್ಟೇ ಮುಜರಾಯಿ ಇಲಾಖೆಯು ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ ಬೆನ್ನಲ್ಲೇ ಇದೀಗ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲು ಸೂಚಿಸಲಾಗಿದೆ.
|
5 |
+
ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಭಕ್ತರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲಾಗುತ್ತದೆ. ತಿರುಪತಿ ದೇವಸ್ಥಾನದಲ್ಲಿ ಲಡ್ಡು ವಿವಾದ ಮುನ್ನಲೆಗೆ ಬಂದಿರುವ ಹಿನ್ನಲೆಯಲ್ಲಿ ಭಕ್ತರಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ಹೀಗಾಗಿ ಈ ಗೊಂದಲವನ್ನು ನಿವಾರಿಸಲು ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸುವುದಾಗಿ ಮುಜರಾಯಿ ಸಚಿವರಾಗಿರುವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
|
6 |
+
ತಿರುಪತಿ ಲಡ್ಡು ವಿವಾದದಿಂದಾಗಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂಬ ಅನುಮಾನ ಎಲ್ಲೆಡೆ ಕೇಳಿಬರುತ್ತಿದೆ. ದೇವಸ್ಥಾನದಲ್ಲಿ ಪ್ರಸಾದವನ್ನು ಸ್ವೀಕರಿಸಲು ಭಕ್ತರು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಇದೆ. ಇದು ನಿವಾರಣೆಯಾಗಬೇಕಾದರೆ ಸರ್ಕಾರ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ.
|
7 |
+
ಪ್ರಸ್ತುತ ತಿರುಪತಿ ದೇವಸ್ಥಾನಕ್ಕೆ ಲಡ್ಡು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನು ಕರ್ನಾಟಕ ಪೂರೈಸುತ್ತಿದೆ. ಕಳೆದ ವರ್ಷ, ತಿರುಪತಿ ತಿರುಮಲ ದೇವಸ್ಥಾನವು ಕೆಎಂಎಫ್ನ ನಂದಿನಿ ತುಪ್ಪ ಮತ್ತು ಇತರ ಉತ್ಪನ್ನಗಳ ಖರೀದಿಯನ್ನು ಬೆಲೆಯ ಕಾರಣವೊಡ್ಡಿ ನಿಲ್ಲಿಸಿತ್ತು. ಕೆಎಂಎಫ್ ಉಲ್ಲೇಖಿಸಿದ ಬೆಲೆಗಳನ್ನು ಟಿಟಿಡಿ ಅನುಮೋದಿಸದೆ ಇತರ ಕಂಪನಿಗಳಿಂದ ತುಪ್ಪವನ್ನು ಖರೀದಿಸಲು ಪ್ರಾರಂಭಿಸಿತ್ತು ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ತಿಳಿಸಿದ್ದರು. ಇದೀಗ ಮತ್ತೆ ಟಿಟಿಡಿ ನಂದಿನಿ ತುಪ್ಪ ಮತ್ತಿತರ ಉತ್ಪನ್ನಗಳನ್ನು ಖರೀದಿಸುತ್ತಿದೆ.
|
8 |
+
ಪ್ರಸಾದ ಖರೀದಿ ಇಳಿಕೆ:
|
9 |
+
ತಿರುಪತಿ ಲಡ್ಡು ವಿವಾದದ ನಂತರ ರಾಜ್ಯದ ಪ್ರಮುಖ ದೇವಾಲಯಗಳಿಗೆ ಬರುವ ಭಕ್ತರು ಪ್ರಸಾದವನ್ನು ಖರೀದಿಸಲು ಹಿಂದೆಮುಂದೆ ನೋಡುತ್ತಿದ್ದಾರೆ. ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂಬ ವಿವಾದ ಕೇಳಿಬರುತ್ತಿದ್ದಂತೆ ಮುಜರಾಯಿ ದೇವಾಲಯಗಳಲ್ಲಿ ಪ್ರಸಾದ ಖರೀದಿಸುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.
|
10 |
+
ರಾಜ್ಯದಲ್ಲಿ ಸುಮಾರು 1.85 ಲಕ್ಷ ದೇವಾಲಯಗಳಿದ್ದು, ಈ ಪೈಕಿ ಸುಮಾರು 34,563 ದೇವಾಲಯಗಳು ಮುಜರಾಯಿ ವ್ಯಾಪ್ತಿಗೆ ಒಳಪಡುವ ದೇವಾಲಯಗಳಾಗಿವೆ. ಆದಾಯದ ಲೆಕ್ಕಾಚಾರದಲ್ಲಿ ಈ ದೇವಾಲಯಗಳನ್ನು ಎ, ಬಿ, ಸಿ ಎಂದು ವರ್ಗೀಕರಿಸಲಾಗಿದೆ.ಕರ್ನಾಟಕದಲ್ಲಿ ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಪೈಕಿ ಸುಮಾರು 207 ದೇವಾಲಯಗಳ ವಾರ್ಷಿಕ ಆದಾಯವು 25 ಲಕ್ಷ ರೂ.ಗಿಂತ ಅಧಿಕವಾಗಿದ್ದು ಇದು ಎ ಶ್ರೇಣಿಯ ದೇವಾಲಯಗಳಾಗಿದೆ.
|
11 |
+
ಹಾಗೆಯೇ 139 ದೇವಾಲಯಗಳ ಆದಾಯವು ಐದು ಲಕ್ಷ ರೂ.ನಿಂದ 25 ಲಕ್ಷ ರೂ. ನಡುವೆ ಬರುವ ಹಿನ್ನೆಲೆ ಇದು ಬಿ ಶ್ರೇಣಿಯ ದೇವಾಲಯ ಎಂದು ವರ್ಗೀಕರಿಸಲಾಗಿದೆ. ಹಾಗೆಯೇ 5 ಲಕ್ಷ ರೂ.ನಿಂದ ಕಡಿಮೆ ಆದಾಯವನ್ನು ಹೊಂದಿರುವ ದೇವಾಲಯಗಳು ಸಿ ಶ್ರೇಣಿಯ ದೇವಾಲಯಗಳೆಂದು ವರ್ಗೀಕರಿಸಲಾಗಿದೆ. ಈ ಪಟ್ಟಿಯಲ್ಲಿ 34,217 ದೇವಾಲಯಗಳಿವೆ.
|
12 |
+
ಆದರೆ ಆದಾಯದ ಪ್ರಕಾರ ಕರ್ನಾಟಕದ ಟಾಪ್ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳು:ಟಾಪ್ 1: ಕುಕ್ಕೆ ಶ್ರೀ ಸುಬ್ರಹಣ್ಯ ಸ್ವಾಮಿ ದೇವಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹಣ್ಯ ಗ್ರಾಮದಲ್ಲಿರುವ ದೇವಾಲಯವಾಗಿದೆ. ಇದು ಜಿಲ್ಲೆಯ ಹಾಗೂ ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದ್ದು, ಇದು ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ
|
13 |
+
ಟಾಪ್ 1 ದೇವಾಲಯವಾಗಿದೆ. 2019ರಲ್ಲಿ ಈ ದೇವಾಲಯವು ಅಂದಾಜು 100 ಕೋಟಿ ಆದಾಯವನ್ನು ಗಳಿಸಿದೆ. ಹುಂಡಿಗೆ ಭಕ್ತರು ಹಾಕುವ ಕಾಣಿಕೆಯನ್ನು ಹೊರತುಪಡಿಸಿ, ದೇವಾಲಯಕ್ಕೆ ಬ್ಯಾಂಕ್ ಡೆಪಾಸಿಟ್ ಬಡ್ಡಿದರ, ಸೇವೆ, ದೇವಾಲಯದ ಹಾಲ್ ಬಾಡಿಗೆಯಿಂದಲೂ ಆದಾಯ ಲಭ್ಯವಾಗುತ್ತದೆ.
|
14 |
+
ಟಾಪ್ 2: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿರುವ ದೇವಾಲಯವಾಗಿದೆ. ಇದು ಹಿಂದೂ ದೇವಾಲಯವಾಗಿದ್ದು, ಮೂಕಾಂಬಿಕಾ ದೇವಿಯ ದೇವಸ್ಥಾನವಾಗಿದೆ. ಕರ್ನಾಟಕ ಮಾತ್ರವಲ್ಲದೆ, ಕೇರಳ, ಬೇರೆ ರಾಜ್ಯಗಳಿಂದ ಈ ದೇವಾಲಯಕ್ಕೆ ಭಕ್ತರು ಆಗಮಿಸುತ್ತಾರೆ. 2019ರ ಲೆಕ್ಕಾಚಾರದ ಪ್ರಕಾರ ಈ ದೇವಾಲಯದ ವಾರ್ಷಿಕ ಆದಾಯವು 90-92 ಕೋಟಿ ರೂಪಾಯಿಯಾಗಿದೆ.
|
15 |
+
ಟಾಪ್ 3: ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನವು ಕರ್ನಾಟಕ ರಾಜ್ಯದಲ್ಲಿ ಅಧಿಕ ಭಕ್ತರು ಆಗಮಿಸುವ ದೇವಾಲಯಗಳಲ್ಲಿ ಒಂದಾಗಿದೆ. ಇದು ಮಂಗಳೂರಿನಿಂದ ಸುಮಾರು 24 ಕಿ.ಮೀ ದೂರದಲ್ಲಿರುವ ದೇವಾಲಯವಾಗಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ದೇಶದಲ್ಲಿ ಕಾಣಿಸಿಕೊಳ್ಳುವುದಕ್ಕೂ ಮುನ್ನ ದೇವಾಲಯದ ಆದಾಯವು 40-42 ಕೋಟಿ ರೂ. ಆಗಿತ್ತು. ಈ ದೇವಾಲಯಕ್ಕೆ ಹುಂಡಿ, ಸೇವೆ ಹಾಗೂ ಕಾಣಿಕೆ ಮೂಲಕ ಅಧಿಕ ಆದಾಯ ಲಭ್ಯವಾಗುತ್ತದೆ.
|
16 |
+
ಟಾಪ್ 4: ಮೈಸೂರಿನ ಚಾಮುಂಡೇಶ್ವರಿ ದೇವಾಲಯ ಮೊದಲ ಮೂರು ಸ್ಥಾನದಲ್ಲಿ ಕರಾವಳಿಯ ದೇವಾಲಯಗಳಿದ್ದರೆ ನಾಲ್ಕನೇ ಸ್ಥಾನದಲ್ಲಿ ಮೈಸೂರಿನ ಪ್ರಸಿದ್ಧ ದೇವಾಲಯವಿದೆ. ಇದು ವಿಶೇಷ ಪ್ರವೇಶ ಟಿಕೆಟ್ನ ಮೂಲಕ, ಪ್ರಸಾದ ರೂಪದಲ್ಲಿ ಲಡ್ಡು ಮಾರಾಟ, ಸೇವೆಗಳು, ಇ-ಸೇವೆ, ಬ್ಯಾಂಕ್ಗಳಲ್ಲಿ ಡೆಪಾಸಿಟ್ನ ಬಡ್ಡಿದರದ ಮೂಲಕ ಆದಾಯವನ್ನು ಗಳಿಸುತ್ತದೆ. 2019ರಲ್ಲಿ ದೇವಾಲಯವು 30-33 ಕೋಟಿ ರೂಪಾಯಿ ಆದಾಯವನ್ನು ಗಳಿಸಿದೆ.
|
17 |
+
ಟಾಪ್ 5: ನಂಜುಂಡೇಶ್ವರಿ ದೇವಾಲಯ ಅತೀ ಹಳೆಯ ದೇವಾಲಯಗಳಲ್ಲಿ ನಂಜುಂಡೇಶ್ವರಿ ದೇವಾಲಯ ಕೂಡಾ ಒಂದಾಗಿದೆ. ಇದನ್ನು ಶ್ರೀಕಂಠೇಶ್ವರ ದೇವಾಲಯ ಎಂದು ಕೂಡಾ ಕರೆಯಲಾಗುತ್ತದೆ. ಇದು ಹುಂಡಿ ಕಾಣಿಕೆ, ಸೇವೆ ಹಾಗೂ ಪ್ರಸಾದದ ಮೂಲಕ ಆದಾಯವನ್ನು ಗಳಿಸುತ್ತದೆ. 2019ರಲ್ಲಿ ದೇವಾಲಯದ ವಾರ್ಷಿಕ ಆದಾಯ 15-20 ಕೋಟಿ ರೂ. ಆಗಿದೆ.
|
18 |
+
ಟಾಪ್ 6: ಸವದತ್ತಿ ಯಲ್ಲಮ ದೇವಾಲಯ ಸವದತ್ತಿ ಯಲ್ಲಮ ದೇವಾಲಯವನ್ನು ರೇಣುಕಾ ದೇವಸ್ಥಾನ ಎಂದೂ ಕೂಡ ಕರೆಯಲಾಗುತ್ತದೆ. ಇದು ಬೆಳಗಾವಿಯ ಸವದತ್ತಿ ಪಟ್ಟಣದಿಂದ 5 ಕಿ.ಮೀ ದೂರದಲ್ಲಿರುವ ಯಾತ್ರಾಸ್ಥಳವಾಗಿದೆ. ಪ್ರತಿ ವರ್ಷ ಅಕ್ಟೋಬರ್ನಿಂದ ಏಪ್ರಿಲ್ ತಿಂಗಳಿನಲ್ಲಿ ಎರಡು ವರ್ಷಕ್ಕೊಮೆ ಜಾತ್ರೆ ನಡೆಯುತ್ತದೆ. ಇಲ್ಲಿಗೆ ಕರ್ನಾಟಕ, ಆಂಧ್ರಪದೇಶ, ಗೋವಾ, ಮಹಾರಾಷ್ಟ್ರದಿಂದ ಭಕ್ತರು ಆಗಮಿಸುತ್ತಾರೆ. ಈ ದೇವಾಲಯದ ಆದಾಯವು 15-17 ಕೋಟಿ ರೂಪಾಯಿ ಆಗಿದೆ.
|
19 |
+
ಟಾಪ್ 7: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಡುಪಿ ಜಿಲ್ಲೆಯ ಬ್ರಹಾವರ ತಾಲ್ಲೂಕಿನಲ್ಲಿರುವ ಮಂದಾರ್ತಿ ಎಂಬ ಪ್ರದೇಶದಲ್ಲಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವಿದೆ. ಈ ದೇವಾಲಯಕ್ಕೆ ಪೂಜೆ, ಯಕ್ಷಗಾನದ ಮೂಲಕ ಆದಾಯ ಲಭಿಸುತ್ತದೆ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದಲ್ಲಿ ಐದು ಮೇಳಗಳಿವೆ. ವರ್ಷದಲ್ಲಿ 1000ಕ್ಕೂ ಅಧಿಕ ಹರಕೆ ಆಟಗಳು ನಡೆಯುತ್ತದೆ. 2027-28ರವರೆಗೆ ಈಗಾಗಲೇ ಹರಕೆ ಆಟವು ಮುಂಗಡವಾಗಿ ಭರ್ತಿಯಾಗಿದೆ. ಈ ದೇವಾಲಯದ ಆದಾಯವು 10-12 ಕೋಟಿ ರೂ. ಆಗಿದೆ.
|
20 |
+
ಟಾಪ್ 8: ಹುಲಿಗೆಮ ದೇವಾಲಯ, ಕೊಪ್ಪಳ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಕೊಪ್ಪಳದ ಹುಲಿಗೆಮ ದೇವಾಲಯ ಕೂಡಾ ಒಂದಾಗಿದೆ. ಹುಲಗಿ ಕ್ಷೇತ್ರ ಎಂಟುನೂರು ವರ್ಷಗಳ ಹಳೆಯ ದೇವಾಲಯವಾಗಿದೆ. ಕೋವಿಡ್ ಸಂದರ್ಭದಲ್ಲಿ ನಿರ್ಬಂಧಗಳಿದ್ದರೂ ಕೂಡಾ ಈ ದೇವಾಲಯಕ್ಕೆ ಭಕ್ತರ ದಂಡು ಹರಿದು ಬಂದಿತ್ತು. ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿ ಬೇರೆ ಬೇರೆ ರಾಜ್ಯದಿಂದ ಭಕ್ತರು ಈ ದೇವಾಲಯಕ್ಕೆ ಆಗಮಿಸುತ್ತಾರೆ. ಇದರ ಆದಾಯ 8-10 ಕೋಟಿ ರೂ. ಆಗಿದೆ.
|
21 |
+
ಟಾಪ್ 9: ಬನಶಂಕರಿ ದೇವಸ್ಥಾನ, ಬೆಂಗಳೂರು ರಾಜ್ಯದ ರಾಜಧಾನಿ ಬೆಂಗಳೂರಿನ ಬನಶಂಕರಿ ದೇವಸ್ಥಾನವೂ ಕೂಡಾ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಒಂದಾಗಿದ್ದು, ಟಾಪ್ 9ನೇ ಸ್ಥಾನದಲ್ಲಿದೆ. ಇದು ಕನಕಪುರ ರಸ್ತೆಯಲ್ಲಿದೆ. ಈ ದೇವಾಲಯದ ಆದಾಯವು 8-10 ಕೋಟಿ ರೂಪಾಯಿ ಆಗಿದೆ.
|
22 |
+
ಟಾಪ್10: ಘಾಟಿ ಸುಬ್ರಹಣ್ಯ ದೇವಸ್ಥಾನ, ದೊಡ್ಡಬಳ್ಳಾಪುರ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹಣ್ಯ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್ 10 ಮುಜರಾಯಿ ವ್ಯಾಪ್ತಿಯ ದೇವಾಲಯವಾಗಿದೆ. 600 ವರ್ಷಗಳ ಇತಿಹಾಸವನ್ನು ಈ ದೇವಾಲಯವು ಹೊಂದಿದೆ. ಡಿಸೆಂಬರ್ ತಿಂಗಳಿನಲ್ಲಿ ಈ ದೇವಾಲಯದಲ್ಲಿ ಜಾತ್ರೆ ನಡೆಯಲಿದ್ದು, ಬೇರೆ ಬೇರೆ ರಾಜ್ಯಗಳಿಂದ ಜನರು ಆಗಮಿಸುತ್ತಾರೆ. ಈ ದೇವಾಲಯದ ಆದಾಯವು 8-10 ಕೋಟಿ ರೂಪಾಯಿ ಆಗಿದೆ.
|
eesanje/url_46_13_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ
|
2 |
+
|
3 |
+
ಬೆಂಗಳೂರು,ಸೆ.21– ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 2024-25ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನಸಹಾಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ಎಸ್ಪಿ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
|
4 |
+
ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ. ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ಎಸ್ಪಿ) ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಧನಸಹಾಯವನ್ನು (ಎಸ್ಎಸ್ಪಿ) ತಂತ್ರಾಂಶದ ಮೂಲಕ ಪಡೆಯಲು ಜಾಲತಾಣ ://.../ ಉಪಯೋಗಿಸಿಕೊಂಡು ಮಂಡಳಿಯ ತಂತ್ರಾಂಶದಲ್ಲಿ ತಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಆಧಾರ್ ಲಿಂಕ್ ಮಾಡಬೇಕು.
|
5 |
+
ಎಸ್ಎಸ್ಪಿ ತಂತ್ರಾಂಶದ ಮೂಲಕ ಶೈಕ್ಷಣಿಕ ಧನಸಹಾಯ ಪಡೆಯಲು ಇದು ಅತ್ಯವಶ್ಯಕವಾಗಿರುವುದರಿಂದ ಈಗಾಗಲೇ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡದೇ ಇರುವ ಎಲ್ಲಾ ಕಾರ್ಮಿಕರು ಕೂಡಲೇ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ನೋಂದಣಿ ಮಾಡಿ ಎನ್ಪಿಸಿಐ ಮ್ಯಾಪಿಂಗ್ ಮಾಡಿಸಬೇಕಿರುತ್ತದೆ.
|
6 |
+
ಮಂಡಳಿಯು 2024-25ನೇ ಸಾಲಿನ ಶೈಕ್ಷಣಿಕ ಸಹಾಯ ಧನಕ್ಕೆ ಮೀಸಲಿಟ್ಟಿರುವ ಆಯವ್ಯಯಕ್ಕೆ ಅನುಗುಣವಾಗಿ ಮಂಡಳಿಯ ನಿರ್ಣಯದಂತೆ ಶೈಕ್ಷಣಿಕ ಧನಸಹಾಯ ಕೋರಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಗುವುದೆಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
7 |
+
ಅವಧಿ ವಿಸ್ತರಣೆಬೆಂಗಳೂರು, ಸೆ.21- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2023-24ನೇ ಸಾಲಿನಲ್ಲಿ ಶೈಕ್ಷಣಿಕ ಧನಸಹಾಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ಎಸ್ಪಿ) ಮೂಲಕ ಮಾ.4 ರವರೆಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾಗಿದ್ದ ಅವಧಿಯನ್ನು ನ.30 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
eesanje/url_46_13_3.txt
ADDED
@@ -0,0 +1,20 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ತಿರುಪತಿ ಲಡ್ಡು ವಿವಾದ ಭುಗಿದೆದ್ದ ಬೆನ್ನಲ್ಲೇ, ಪ್ರಸಾದ ಖರೀದಿಗೆ ಜನ ಹಿಂದೇಟು
|
2 |
+
,
|
3 |
+
ಬೆಂಗಳೂರು, ಸೆ.21-ಆಂಧ್ರಪ್ರದೇಶದ ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿಯ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳ ಪಡಿಸಲು ರಾಜ್ಯಸ ರ್ಕಾರ ಸೂಚನೆ ನೀಡಿದೆ.
|
4 |
+
ವಿಶೇಷವೆಂದರೆ ಶುಕ್ರವಾರವಷ್ಟೇ ಮುಜರಾಯಿ ಇಲಾಖೆಯು ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ ಬೆನ್ನಲ್ಲೇ ಇದೀಗ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲು ಸೂಚಿಸಲಾಗಿದೆ.ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಭಕ್ತರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲಾಗುತ್ತದೆ.
|
5 |
+
ತಿರುಪತಿ ದೇವಸ್ಥಾನದಲ್ಲಿ ಲಡ್ಡು ವಿವಾದ ಮುನ್ನಲೆಗೆ ಬಂದಿರುವ ಹಿನ್ನಲೆಯಲ್ಲಿ ಭಕ್ತರಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ಹೀಗಾಗಿ ಈ ಗೊಂದಲವನ್ನು ನಿವಾರಿಸಲು ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸುವುದಾಗಿ ಮುಜರಾಯಿ ಸಚಿವರಾಗಿರುವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
|
6 |
+
ತಿರುಪತಿ ಲಡ್ಡು ವಿವಾದದಿಂದಾಗಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂಬ ಅನುಮಾನ ಎಲ್ಲೆಡೆ ಕೇಳಿಬರುತ್ತಿದೆ. ದೇವಸ್ಥಾನದಲ್ಲಿ ಪ್ರಸಾದವನ್ನು ಸ್ವೀಕರಿಸಲು ಭಕ್ತರು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಇದೆ. ಇದು ನಿವಾರಣೆಯಾಗಬೇಕಾದರೆ ಸರ್ಕಾರ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ.
|
7 |
+
ಪ್ರಸ್ತುತ ತಿರುಪತಿ ದೇವಸ್ಥಾನಕ್ಕೆ ಲಡ್ಡು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನು ಕರ್ನಾಟಕ ಪೂರೈಸುತ್ತಿದೆ. ಕಳೆದ ವರ್ಷ, ತಿರುಪತಿ ತಿರುಮಲ ದೇವಸ್ಥಾನವು ಕೆಎಂಎಫ್ನ ನಂದಿನಿ ತುಪ್ಪ ಮತ್ತು ಇತರ ಉತ್ಪನ್ನಗಳ ಖರೀದಿಯನ್ನು ಬೆಲೆಯ ಕಾರಣವೊಡ್ಡಿ ನಿಲ್ಲಿಸಿತ್ತು. ಕೆಎಂಎಫ್ ಉಲ್ಲೇಖಿಸಿದ ಬೆಲೆಗಳನ್ನು ಟಿಟಿಡಿ ಅನುಮೋದಿಸದೆ ಇತರ ಕಂಪನಿಗಳಿಂದ ತುಪ್ಪವನ್ನು ಖರೀದಿಸಲು ಪ್ರಾರಂಭಿಸಿತ್ತು ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ತಿಳಿಸಿದ್ದರು. ಇದೀಗ ಮತ್ತೆ ಟಿಟಿಡಿ ನಂದಿನಿ ತುಪ್ಪ ಮತ್ತಿತರ ಉತ್ಪನ್ನಗಳನ್ನು ಖರೀದಿಸುತ್ತಿದೆ.
|
8 |
+
ಪ್ರಸಾದ ಖರೀದಿ ಇಳಿಕೆ:ತಿರುಪತಿ ಲಡ್ಡು ವಿವಾದದ ನಂತರ ರಾಜ್ಯದ ಪ್ರಮುಖ ದೇವಾಲಯಗಳಿಗೆ ಬರುವ ಭಕ್ತರು ಪ್ರಸಾದವನ್ನು ಖರೀದಿಸಲು ಹಿಂದೆಮುಂದೆ ನೋಡುತ್ತಿದ್ದಾರೆ. ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂಬ ವಿವಾದ ಕೇಳಿಬರುತ್ತಿದ್ದಂತೆ ಮುಜರಾಯಿ ದೇವಾಲಯಗಳಲ್ಲಿ ಪ್ರಸಾದ ಖರೀದಿಸುವವ�� ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.
|
9 |
+
ರಾಜ್ಯದಲ್ಲಿ ಸುಮಾರು 1.85 ಲಕ್ಷ ದೇವಾಲಯಗಳಿದ್ದು, ಈ ಪೈಕಿ ಸುಮಾರು 34,563 ದೇವಾಲಯಗಳು ಮುಜರಾಯಿ ವ್ಯಾಪ್ತಿಗೆ ಒಳಪಡುವ ದೇವಾಲಯಗಳಾಗಿವೆ. ಆದಾಯದ ಲೆಕ್ಕಾಚಾರದಲ್ಲಿ ಈ ದೇವಾಲಯಗಳನ್ನು ಎ, ಬಿ, ಸಿ ಎಂದು ವರ್ಗೀಕರಿಸಲಾಗಿದೆ.ಕರ್ನಾಟಕದಲ್ಲಿ ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಪೈಕಿ ಸುಮಾರು 207 ದೇವಾಲಯಗಳ ವಾರ್ಷಿಕ ಆದಾಯವು 25 ಲಕ್ಷ ರೂ.ಗಿಂತ ಅಧಿಕವಾಗಿದ್ದು ಇದು ಎ ಶ್ರೇಣಿಯ ದೇವಾಲಯಗಳಾಗಿದೆ.
|
10 |
+
ಹಾಗೆಯೇ 139 ದೇವಾಲಯಗಳ ಆದಾಯವು ಐದು ಲಕ್ಷ ರೂ.ನಿಂದ 25 ಲಕ್ಷ ರೂ. ನಡುವೆ ಬರುವ ಹಿನ್ನೆಲೆ ಇದು ಬಿ ಶ್ರೇಣಿಯ ದೇವಾಲಯ ಎಂದು ವರ್ಗೀಕರಿಸಲಾಗಿದೆ. ಹಾಗೆಯೇ 5 ಲಕ್ಷ ರೂ.ನಿಂದ ಕಡಿಮೆ ಆದಾಯವನ್ನು ಹೊಂದಿರುವ ದೇವಾಲಯಗಳು ಸಿ ಶ್ರೇಣಿಯ ದೇವಾಲಯಗಳೆಂದು ವರ್ಗೀಕರಿಸಲಾಗಿದೆ. ಈ ಪಟ್ಟಿಯಲ್ಲಿ 34,217 ದೇವಾಲಯಗಳಿವೆ.
|
11 |
+
ಆದರೆ ಆದಾಯದ ಪ್ರಕಾರ ಕರ್ನಾಟಕದ ಟಾಪ್ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳು:ಟಾಪ್ 1: ಕುಕ್ಕೆ ಶ್ರೀ ಸುಬ್ರಹಣ್ಯ ಸ್ವಾಮಿ ದೇವಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹಣ್ಯ ಗ್ರಾಮದಲ್ಲಿರುವ ದೇವಾಲಯವಾಗಿದೆ. ಇದು ಜಿಲ್ಲೆಯ ಹಾಗೂ ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದ್ದು, ಇದು ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್ 1 ದೇವಾಲಯವಾಗಿದೆ. 2019ರಲ್ಲಿ ಈ ದೇವಾಲಯವು ಅಂದಾಜು 100 ಕೋಟಿ ಆದಾಯವನ್ನು ಗಳಿಸಿದೆ. ಹುಂಡಿಗೆ ಭಕ್ತರು ಹಾಕುವ ಕಾಣಿಕೆಯನ್ನು ಹೊರತುಪಡಿಸಿ, ದೇವಾಲಯಕ್ಕೆ ಬ್ಯಾಂಕ್ ಡೆಪಾಸಿಟ್ ಬಡ್ಡಿದರ, ಸೇವೆ, ದೇವಾಲಯದ ಹಾಲ್ ಬಾಡಿಗೆಯಿಂದಲೂ ಆದಾಯ ಲಭ್ಯವಾಗುತ್ತದೆ.
|
12 |
+
ಟಾಪ್ 2: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿರುವ ದೇವಾಲಯವಾಗಿದೆ. ಇದು ಹಿಂದೂ ದೇವಾಲಯವಾಗಿದ್ದು, ಮೂಕಾಂಬಿಕಾ ದೇವಿಯ ದೇವಸ್ಥಾನವಾಗಿದೆ. ಕರ್ನಾಟಕ ಮಾತ್ರವಲ್ಲದೆ, ಕೇರಳ, ಬೇರೆ ರಾಜ್ಯಗಳಿಂದ ಈ ದೇವಾಲಯಕ್ಕೆ ಭಕ್ತರು ಆಗಮಿಸುತ್ತಾರೆ. 2019ರ ಲೆಕ್ಕಾಚಾರದ ಪ್ರಕಾರ ಈ ದೇವಾಲಯದ ವಾರ್ಷಿಕ ಆದಾಯವು 90-92 ಕೋಟಿ ರೂಪಾಯಿಯಾಗಿದೆ.
|
13 |
+
ಟಾಪ್ 3: ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನವು ಕರ್ನಾಟಕ ರಾಜ್ಯದಲ್ಲಿ ಅಧಿಕ ಭಕ್ತರು ಆಗಮಿಸುವ ದೇವಾಲಯಗಳಲ್ಲಿ ಒಂದಾಗಿದೆ. ಇದು ಮಂಗಳೂರಿನಿಂದ ಸುಮಾರು 24 ಕಿ.ಮೀ ದೂರದಲ್ಲಿರುವ ದೇವಾಲಯವಾಗಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ದೇಶದಲ್ಲಿ ಕಾಣಿಸಿಕೊಳ್ಳುವುದಕ್ಕೂ ಮುನ್ನ ದೇವಾಲಯದ ಆದಾಯವು 40-42 ಕೋಟಿ ರೂ. ಆಗಿತ್ತು. ಈ ದೇವಾಲಯಕ್ಕೆ ಹುಂಡಿ, ಸೇವೆ ಹಾಗೂ ಕಾಣಿಕೆ ಮೂಲಕ ಅಧಿಕ ಆದಾಯ ಲಭ್ಯವಾಗುತ್ತದೆ.
|
14 |
+
ಟಾಪ್ 4: ಮೈಸೂರಿನ ಚಾಮುಂಡೇಶ್ವರಿ ದೇವಾಲಯ ಮೊದಲ ಮೂರು ಸ್ಥಾನದಲ್ಲಿ ಕರಾವಳಿಯ ದೇವಾಲಯಗಳಿದ್ದರೆ ನಾಲ್ಕನೇ ಸ್ಥಾನದಲ್ಲಿ ಮೈಸೂರಿನ ಪ್ರಸಿದ್ಧ ದೇವಾಲಯವಿದೆ. ಇದು ವಿ���ೇಷ ಪ್ರವೇಶ ಟಿಕೆಟ್ನ ಮೂಲಕ, ಪ್ರಸಾದ ರೂಪದಲ್ಲಿ ಲಡ್ಡು ಮಾರಾಟ, ಸೇವೆಗಳು, ಇ-ಸೇವೆ, ಬ್ಯಾಂಕ್ಗಳಲ್ಲಿ ಡೆಪಾಸಿಟ್ನ ಬಡ್ಡಿದರದ ಮೂಲಕ ಆದಾಯವನ್ನು ಗಳಿಸುತ್ತದೆ. 2019ರಲ್ಲಿ ದೇವಾಲಯವು 30-33 ಕೋಟಿ ರೂಪಾಯಿ ಆದಾಯವನ್ನು ಗಳಿಸಿದೆ.
|
15 |
+
ಟಾಪ್ 5: ನಂಜುಂಡೇಶ್ವರಿ ದೇವಾಲಯ ಅತೀ ಹಳೆಯ ದೇವಾಲಯಗಳಲ್ಲಿ ನಂಜುಂಡೇಶ್ವರಿ ದೇವಾಲಯ ಕೂಡಾ ಒಂದಾಗಿದೆ. ಇದನ್ನು ಶ್ರೀಕಂಠೇಶ್ವರ ದೇವಾಲಯ ಎಂದು ಕೂಡಾ ಕರೆಯಲಾಗುತ್ತದೆ. ಇದು ಹುಂಡಿ ಕಾಣಿಕೆ, ಸೇವೆ ಹಾಗೂ ಪ್ರಸಾದದ ಮೂಲಕ ಆದಾಯವನ್ನು ಗಳಿಸುತ್ತದೆ. 2019ರಲ್ಲಿ ದೇವಾಲಯದ ವಾರ್ಷಿಕ ಆದಾಯ 15-20 ಕೋಟಿ ರೂ. ಆಗಿದೆ.
|
16 |
+
ಟಾಪ್ 6: ಸವದತ್ತಿ ಯಲ್ಲಮ ದೇವಾಲಯ ಸವದತ್ತಿ ಯಲ್ಲಮ ದೇವಾಲಯವನ್ನು ರೇಣುಕಾ ದೇವಸ್ಥಾನ ಎಂದೂ ಕೂಡ ಕರೆಯಲಾಗುತ್ತದೆ. ಇದು ಬೆಳಗಾವಿಯ ಸವದತ್ತಿ ಪಟ್ಟಣದಿಂದ 5 ಕಿ.ಮೀ ದೂರದಲ್ಲಿರುವ ಯಾತ್ರಾಸ್ಥಳವಾಗಿದೆ. ಪ್ರತಿ ವರ್ಷ ಅಕ್ಟೋಬರ್ನಿಂದ ಏಪ್ರಿಲ್ ತಿಂಗಳಿನಲ್ಲಿ ಎರಡು ವರ್ಷಕ್ಕೊಮೆ ಜಾತ್ರೆ ನಡೆಯುತ್ತದೆ. ಇಲ್ಲಿಗೆ ಕರ್ನಾಟಕ, ಆಂಧ್ರಪದೇಶ, ಗೋವಾ, ಮಹಾರಾಷ್ಟ್ರದಿಂದ ಭಕ್ತರು ಆಗಮಿಸುತ್ತಾರೆ. ಈ ದೇವಾಲಯದ ಆದಾಯವು 15-17 ಕೋಟಿ ರೂಪಾಯಿ ಆಗಿದೆ.
|
17 |
+
ಟಾಪ್ 7: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಡುಪಿ ಜಿಲ್ಲೆಯ ಬ್ರಹಾವರ ತಾಲ್ಲೂಕಿನಲ್ಲಿರುವ ಮಂದಾರ್ತಿ ಎಂಬ ಪ್ರದೇಶದಲ್ಲಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವಿದೆ. ಈ ದೇವಾಲಯಕ್ಕೆ ಪೂಜೆ, ಯಕ್ಷಗಾನದ ಮೂಲಕ ಆದಾಯ ಲಭಿಸುತ್ತದೆ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದಲ್ಲಿ ಐದು ಮೇಳಗಳಿವೆ. ವರ್ಷದಲ್ಲಿ 1000ಕ್ಕೂ ಅಧಿಕ ಹರಕೆ ಆಟಗಳು ನಡೆಯುತ್ತದೆ. 2027-28ರವರೆಗೆ ಈಗಾಗಲೇ ಹರಕೆ ಆಟವು ಮುಂಗಡವಾಗಿ ಭರ್ತಿಯಾಗಿದೆ. ಈ ದೇವಾಲಯದ ಆದಾಯವು 10-12 ಕೋಟಿ ರೂ. ಆಗಿದೆ.
|
18 |
+
ಟಾಪ್ 8: ಹುಲಿಗೆಮ ದೇವಾಲಯ, ಕೊಪ್ಪಳ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಕೊಪ್ಪಳದ ಹುಲಿಗೆಮ ದೇವಾಲಯ ಕೂಡಾ ಒಂದಾಗಿದೆ. ಹುಲಗಿ ಕ್ಷೇತ್ರ ಎಂಟುನೂರು ವರ್ಷಗಳ ಹಳೆಯ ದೇವಾಲಯವಾಗಿದೆ. ಕೋವಿಡ್ ಸಂದರ್ಭದಲ್ಲಿ ನಿರ್ಬಂಧಗಳಿದ್ದರೂ ಕೂಡಾ ಈ ದೇವಾಲಯಕ್ಕೆ ಭಕ್ತರ ದಂಡು ಹರಿದು ಬಂದಿತ್ತು. ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿ ಬೇರೆ ಬೇರೆ ರಾಜ್ಯದಿಂದ ಭಕ್ತರು ಈ ದೇವಾಲಯಕ್ಕೆ ಆಗಮಿಸುತ್ತಾರೆ. ಇದರ ಆದಾಯ 8-10 ಕೋಟಿ ರೂ. ಆಗಿದೆ.
|
19 |
+
ಟಾಪ್ 9: ಬನಶಂಕರಿ ದೇವಸ್ಥಾನ, ಬೆಂಗಳೂರು ರಾಜ್ಯದ ರಾಜಧಾನಿ ಬೆಂಗಳೂರಿನ ಬನಶಂಕರಿ ದೇವಸ್ಥಾನವೂ ಕೂಡಾ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಒಂದಾಗಿದ್ದು, ಟಾಪ್ 9ನೇ ಸ್ಥಾನದಲ್ಲಿದೆ. ಇದು ಕನಕಪುರ ರಸ್ತೆಯಲ್ಲಿದೆ. ಈ ದೇವಾಲಯದ ಆದಾಯವು 8-10 ಕೋಟಿ ರೂಪಾಯಿ ಆಗಿದೆ.
|
20 |
+
ಟಾಪ್10: ಘಾಟಿ ಸುಬ್ರಹಣ್ಯ ದೇವಸ್ಥಾನ, ದೊಡ್ಡಬಳ್ಳಾಪುರ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲ��� ಒಂದಾದ ಘಾಟಿ ಸುಬ್ರಹಣ್ಯ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್ 10 ಮುಜರಾಯಿ ವ್ಯಾಪ್ತಿಯ ದೇವಾಲಯವಾಗಿದೆ. 600 ವರ್ಷಗಳ ಇತಿಹಾಸವನ್ನು ಈ ದೇವಾಲಯವು ಹೊಂದಿದೆ. ಡಿಸೆಂಬರ್ ತಿಂಗಳಿನಲ್ಲಿ ಈ ದೇವಾಲಯದಲ್ಲಿ ಜಾತ್ರೆ ನಡೆಯಲಿದ್ದು, ಬೇರೆ ಬೇರೆ ರಾಜ್ಯಗಳಿಂದ ಜನರು ಆಗಮಿಸುತ್ತಾರೆ. ಈ ದೇವಾಲಯದ ಆದಾಯವು 8-10 ಕೋಟಿ ರೂಪಾಯಿ ಆಗಿದೆ.
|
eesanje/url_46_13_4.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಈಗಲೇ ರಾಜೀನಾಮೆ ಕೊಡ್ತೀನಿ ತೊಗೊಳ್ಳಿ ಸ್ವಾಮಿ : ನ್ಯಾಯಾಧೀಶರ ಮುಂದೆ ಶಾಸಕ ಮುನಿರತ್ನ ಅಳಲು
|
2 |
+
'
|
3 |
+
ಬೆಂಗಳೂರು,ಸೆ.21– ನಾನು ಬೇಕಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ. ಇಂತಹ ಮಾನಸಿಕ ಕಿರುಕುಳ ಯಾರಿಗೂ ಬೇಡ. ಬೇಕಾದರೆ ಈಗಲೇ ರಾಜೀನಾಮೆ ಪತ್ರವನ್ನು ತೆಗೆದುಕೊಳ್ಳಿ ಸ್ವಾಮಿ..!!ಅತ್ಯಾಚಾರ ಆರೋಪದ ಮೇಲೆ ಬಂಧನಕ್ಕೊಳಪಟ್ಟಿರುವ ಬಿಜೆಪಿ ಶಾಸಕ ಮುನಿರತ್ನ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಅಲವತ್ತುಕೊಂಡಿದ್ದು ಹೀಗೆ.
|
4 |
+
ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸರು ವಿಚಾರಣೆ ನಡೆಸಿದ ನಂತರ ಮುನಿರತ್ನ ಅವರನ್ನು ಬೆಳಗ್ಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಮೂರ್ತಿಗಳು ಪ್ರಕರಣ ಕುರಿತು ಆರೋಪಿಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟರು. ಆಗ ಮುನಿರತ್ನ ಅವರು, ಐದು ವರ್ಷದ ನಂತರ ಈ ಪ್ರಕರಣ ಆಚೆ ಬಂದಿದೆ.
|
5 |
+
ಒಂದು ವೇಳೆ ಅಂತಹ ನೀಚ ಕೆಲಸವನ್ನು ಮಾಡಿದ್ದರೆ ಸಂತ್ರಸ್ತ ಮಹಿಳೆ ಈವರೆಗೂ ಏಕೆ ಸುಮನಿದ್ದರು. ಅಂದೇ ದೂರು ಕೊಡಬಹುದಿತ್ತಲ್ಲವೇ? ಇದು ವ್ಯವಸ್ಥಿತ ರಾಜಕೀಯ ಷಡ್ಯಂತರ ಎಂದು ನೋವು ಹೊರಹಾಕಿದರು.
|
6 |
+
ಲೋಕಸಭೆಯ ಚುನಾವಣೆ ಫಲಿತಾಂಶ ಬಂದ ನಂತರ ನನ್ನ ಮೇಲೆ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ಕೆಲವರು ನಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ತನ್ನ ಸಹೋದರನಿಗೆ ಹಿನ್ನಡೆಯಾಯಿತಲ್ಲ ಎಂದು ಸುಳ್ಳು ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ ಸ್ವಾಮಿ.. ನೀವು ಹೇಳಿದರೆ ನನ್ನ ಶಾಸಕ ಸ್ಥಾನಕ್ಕೆ ಈಗಲೇ ರಾಜೀನಾಮೆ ಕೊಟ್ಟು ಮನೆಯಲ್ಲಿ ನೆಮದಿಯಾಗಿರುತ್ತೇನೆ ಎಂದಿದ್ದಾರೆ.
|
7 |
+
ಆಗ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಇದು ನ್ಯಾಯಾಲಯ ಎಂಬುದು ನಿಮ ಗಮನದಲ್ಲಿರಲಿ. ನೀವು ರಾಜೀನಾಮೆಯನ್ನು ಯಾರಿಗೆ ಕೊಡಬೇಕೋ ಅವರಿಗೆ ಕೊಡಿ. ನಾನು ಕೇಳುತ್ತಿರುವ ಪ್ರಶ್ನೆಗಳಿಗೆ ಮಾತ್ರ ಉತ್ತರ ಕೊಡಿ ಎಂದು ಸೂಚಿಸಿದರು. ಮಾತು ಮುಂದುವರೆಸಿದ ಮುನಿರತ್ನ ಇದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವ್ಯವಸ್ಥಿತ ಷಡ್ಯಂತ್ರವಾಗಿದೆ. ನಾನು ಯಾವ ಮಹಿಳೆಯ ಮೇಲೂ ಅತ್ಯಾಚಾರ ನಡೆಸಿಲ್ಲ. ಸಾರ್ವಜನಿಕ ಜೀವನದಲ್ಲಿ ನನ್ನದೇ ಆದ ಘನತೆ ಇಟ್ಟುಕೊಂಡಿದ್ದೇನೆ.
|
8 |
+
ನಿಜ ಹೇಳಬೇಕೆಂದರೆ ಆ ಮಹಿಳೆಯೇ ನನಗೆ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ ನೋಡುವಂತೆ ಪ್ರಚೋದನೆ ಮಾಡುತ್ತಿದ್ದರು. ನಾನು ಎಂದೂ ಇಂತಹ ನೀಚ ಕೆಲಸ ಮಾಡಲಿಲ್ಲ. ನನ್ನ ಕ್ಷೇತ್ರದಲ್ಲಿರುವ ರಾಜಕೀಯ ಎದುರಾಳಿಗಳು ಕೆಲವು ಪ್ರಭಾವಿಗಳ ಜೊತೆ ಸೇರಿಕೊಂಡು ಇಂತಹ ಷಡ್ಯಂತ್ರ ನಡೆಸಿದ್ದಾರೆ ಎಂದು ನೋವು ತೋಡಿಕೊಂಡರು.
|
9 |
+
ರಾಜಕೀಯಕ್ಕೆ ಬಂದ ಮೇಲೆ ನನ್ನ ಮೇಲೆ ಇಂಥ ಆರೋಪಗಳು ಕೇಳಿಬರುತ್ತಲೇ ಇದೆ. ನಮಂಥವರು ಸಾರ್ವಜನಿಕ ಕ್ಷೇತ್ರದಲ್ಲಿ ಇರಬಾರದು ಎಂಬುದು ಕೆಲವರ ದುರಾಲೋಚನೆ. ಹೇಗಾದರೂ ಮಾಡಿ ಐದು ವರ್ಷ ಜೈಲಿನಲ್ಲಿ ಕೂರಿಸಲು ಆಧಾರರಹಿತ ಆರೋಪಗಳನ್ನು ಮಾಡು���್ತಿದ್ದಾರೆ. ನಾನು ಶಾಸಕನಾಗಿ ಮುಂದುವರೆಯಬಾರದೆಂದ ಇಚ್ಛೆ ಇದ್ದರೆ ರಾಜೀನಾಮೆ ಕೊಟ್ಟುಬಿಡುತ್ತೇನೆ ಎಂದು ಹೇಳಿದರು.
|
10 |
+
ನೀವು ರಾಜೀನಾಮೆ ನೀಡಬೇಡಿ. ಜನಪ್ರತಿನಿಧಿಯಾಗಿ ಮುಂದುವರೆಯುವ ಆಸಕ್ತಿ ಇಲ್ಲದಿದ್ದರೆ ಸಂಬಂಧಪಟ್ಟವರ ಬಳಿ ರಾಜೀನಾಮೆ ವಿಷಯವನ್ನು ಮಾತನಾಡಿ ಎಂದು ಸೂಚಿಸಿ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದರು.
|
eesanje/url_46_13_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಮುನಿರತ್ನ ಮೇಲಿನ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ..!?
|
2 |
+
|
3 |
+
ಬೆಂಗಳೂರು,ಸೆ.21-ಶಾಸಕ ಮುನಿರತ್ನ ಅವರ ಕರ್ಮಕಾಂಡಗಳ ತನಿಖೆಗೆ ವಿಶೇಷ ತನಿಖಾ ದಳ ರಚಿಸಲು ನಿರ್ಧರಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಮುನಿರತ್ನ ಅವರ ವಿರುದ್ಧ ಹಲವು ರೀತಿಯ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಹೊಸದಾಗಿ ಬೆಳಕಿಗೆ ಬಂದ ಹನಿಟ್ರ್ಯಾಪ್, ಎಚ್ಐವಿ ಸೋಂಕು ಹರಡಿಸುವ ಹುನ್ನಾರ, ಅತ್ಯಾಚಾರ ಸೇರಿದಂತೆ ನಾನಾ ಆರೋಪಗಳಲ್ಲಿ ಪ್ರಕರಣ ದಾಖಲಾಗಿವೆ.
|
4 |
+
ಈ ಮೊದಲು 2009 ರಿಂದಲೂ ಮುನಿರತ್ನ ವಿರುದ್ಧ ಹಲವು ಸ್ವರೂಪದ ಪ್ರಕರಣಗಳು ವಿವಿಧ ಹಂತದಲ್ಲಿವೆ. ಬಿಬಿಎಂಪಿಯ ಕಡತಗಳನ್ನು ತಮ ಮನೆಯಲ್ಲಿ ಇಟ್ಟುಕೊಂಡಿರುವುದು, ಕಾಮಗಾರಿಗಳಲ್ಲಿ ನೂರಾರು ಕೋಟಿ ರೂ. ಅಕ್ರಮ ಸೇರಿದಂತೆ ಹಲವು ದೂರುಗಳಿವೆ.ಮುನಿರತ್ನ ಅವರು ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಯಾವ ಹಂತಕ್ಕಾದರೂ ತಲುಪುತ್ತಾರೆ ಎಂಬ ಆರೋಪಗಳಿವೆ.
|
5 |
+
ಈ ಹಿನ್ನೆಲೆಯಲ್ಲಿ ಮುನಿರತ್ನ ಹಲವಾರು ಕುಕೃತ್ಯಗಳನ್ನು ನಡೆಸಿದ್ದು, ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಆರಂಭದಲ್ಲಿ ದೂರು ನೀಡಿದವರು ಹಿಂದೇಟು ಹಾಕಿದವರು ಈಗ ಒಬ್ಬೊಬ್ಬರಾಗಿ ದೂರು ನೀಡಲಾರಂಭಿಸಿದ್ದಾರೆ.
|
6 |
+
ಗುತ್ತಿಗೆದಾರ ಚೆಲುವರಾಜು ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಬಳಿಕ ಮುನಿರತ್ನ ಅವರ ಗ್ರಹಚಾರ ಕೆಟ್ಟಂತಾಗಿದೆ. ಜಾತಿನಿಂದನೆ ಸೇರಿದಂತೆ ವಿವಿಧ ಆರೋಪಗಳಡಿ ಬಂಧನಕ್ಕೊಳಗಾಗಿ ಜೈಲುಪಾಲಾಗಿದ್ದಾರೆ. ಅದರ ಬೆನ್ನಲ್ಲೇ ಮಹಿಳೆಯೊಬ್ಬರು ಅತ್ಯಾಚಾರದ ಆರೋಪದಡಿ ದೂರು ದಾಖಲಿಸಿದ್ದಾರೆ. ಹೀಗಾಗಿ ಜಾಮೀನು ದೊರೆತರೂ ಮುನಿರತ್ನ ಮತ್ತೆ ಜೈಲಿನಲ್ಲೇ ಉಳಿಯುವಂತಾಗಿದೆ.
|
7 |
+
ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರು ಸಭೆ ನಡೆಸಿ ಮುನಿರತ್ನ ಅವರ ಹೇಳಿಕೆಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅವರ ವಿರುದ್ಧದ ಎಲ್ಲಾ ದೂರುಗಳನ್ನು ವಿಶೇಷ ತನಿಖಾ ದಳ ರಚಿಸಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು.
|
8 |
+
ಒಕ್ಕಲಿಗ ಸಮುದಾಯುದ ಈ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುತೇಕ ಸಂಬಂಧಿಸಿದ್ದು ಎಸ್ಐಟಿ ರಚನೆಗೆ ಕ್ರಮ ಕೈಗೊಳ್ಳುವಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದು, ಅದರ ಪ್ರಕಾರ, ಎಸ್ಐಟಿ ರಚನೆ ಬಹುತೇಕ ಖಚಿತವಾಗಿದ್ದು, ಯಾವುದೇ ಕ್ಷಣದಲ್ಲಿ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.
|
eesanje/url_46_13_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮೈಸೂರು ದಸರಾ 2024 : ‘ಯುವ ಸಂಭ್ರಮ’ದ ಪೋಸ್ಟರ್ ಹಾಗೂ ವೆಬ್ ಸೈಟ್ ಬಿಡುಗಡೆ
|
2 |
+
|
3 |
+
ಮೈಸೂರು, ಸೆ. 21– ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.
|
4 |
+
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು.
|
5 |
+
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
|
eesanje/url_46_13_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ಕೂಟ
|
2 |
+
, ,
|
3 |
+
ಮೈಸೂರು ಸೆ.21-ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಮಾವುತರಿಗೆ ಉಪಹಾರ ಬಡಿಸಿದರು.
|
4 |
+
ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು. ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು.
|
5 |
+
ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.
|
6 |
+
ನರಸಿಂಹ ರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_13_8.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಶಾಸಕ ಮುನಿರತ್ನ ವಿಶ್ವದಲ್ಲೇ ಕಂಡುಕೇಳರಿಯದಂತಹ ಸಂಚು ಮಾಡಿದ್ದಾರೆ : ಡಿಕೆಶಿ
|
2 |
+
:
|
3 |
+
ಬೆಂಗಳೂರು,ಸೆ.21-ವಿಶ್ವದಲ್ಲೇ ಕಂಡಿರದಂತಹ ಸಂಚನ್ನು ಆರ್ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಸ್ವಪಕ್ಷ ಹಾಗೂ ವಿರೋಧಪಕ್ಷದ ವಿರುದ್ಧ ನಡೆಸಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಸತ್ಯಾಸತ್ಯತೆ ತಿಳಿದು ಮಾತನಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.
|
4 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರ್ಯಾರು ಸಿಕ್ಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಿಲ್ಲ. ಎಲ್ಲವನ್ನೂ ಪರಿಶೀಲಿಸಿದ ಬಳಿಕ ಮಾತನಾಡುವುದು ಒಳ್ಳೆಯದು ಎಂದರು.
|
5 |
+
ಮುನಿರತ್ನ ಪ್ರಕರಣದಲ್ಲಿ ಎಸ್ಐಟಿ ರಚನೆ ಮಾಡಬೇಕೆಂಬುದು ನಮ ಪಕ್ಷದ ಶಾಸಕರು, ಸಚಿವರು, ಕೆಲ ಮುಖಂಡರು ಮನವಿ ಮಾಡಿರುವ ಬಗ್ಗೆ ಹೆಚ್ಚಿನ ಚರ್ಚೆಯಾಗಿಲ್ಲ. ಆದರೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿರುದ್ಧ ನಡೆದಿರುವ ಷಡ್ಯಂತ್ರದ ಬಗ್ಗೆ ಕೇಳಿ ದಿಗ್ಭ್ರಮೆಯಾಯಿತು. ದೇಶದಲ್ಲಷ್ಟೇ ಅಲ್ಲ ವಿಶ್ವದಲ್ಲೇ ಈ ರೀತಿಯ ಸಂಚನ್ನು ನಾನು ನೋಡಿಲ್ಲ ಎಂದು ಹೇಳಿದರು.
|
6 |
+
ಸಿ.ಟಿ.ರವಿಯಣ್ಣ, ಅಶೋಕಣ್ಣ, ವಿಜಯೇಂದ್ರಣ್ಣ, ಕುಮಾರಣ್ಣ ಅವರು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಮಾತನಾಡಬೇಕು. ತಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಿದರು.ಮುನಿರತ್ನ ಪ್ರಕರಣದಲ್ಲಿ ಜೆಡಿಎಸ್, ಬಿಜೆಪಿ ಮುಖಂಡರು ಉತ್ತರ ಕೊಡಬೇಕು, ನಾವುಗಳಲ್ಲ ಎಂದರು.
|
7 |
+
ಈ ಪ್ರಕರಣದಲ್ಲಿ ಸೇಡಿನ ರಾಜಕಾರಣ, ಟೀಕೆಗಳು ಮಾಡುತ್ತಿದ್ದಾರೆ. ಬಿಜೆಪಿ ಅಶ್ವತ್ಥ ನಾರಾಯಣ ಹಾಗೂ ಮತ್ತಿತರರು ನನ್ನನ್ನು ನೆನಪಿಸಿಕೊಳ್ಳಬೇಕು. ಇಲ್ಲದೇ ಇದ್ದರೆ ಅವರಿಗೆ ದಿನ ಬೆಳಗಾಗುವುದೇ ಇಲ್ಲ. ಮುನಿರತ್ನ ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಜೆಡಿಎಸ್, ಬಿಜೆಪಿ ನಾಯಕರನ್ನು ಜನ ಗಮನಿಸುತ್ತಿದ್ದಾರೆ ಎಂದು ಹೇಳಿದರು.
|
8 |
+
ಕುಮಾರಸ್ವಾಮಿಯವರ ಡಿ ನೋಟಿಫಿಕೇಶನ್ ಪ್ರಕರಣದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಬೆಂಗಳೂರಿನಲ್ಲಿ ಇರುವ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಿನ್ನೆಗೆ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಗುಂಡಿಗಳ ಲೆಕ್ಕವೂ ನನ್ನ ಮೊಬೈಲ್ನಲ್ಲಿದೆ.
|
9 |
+
ತಾವು ಸೂಚನೆ ನೀಡಿದ ಬಳಿಕ ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ತಮ 40 ವರ್ಷಗಳ ಜೀವನದಲ್ಲಿ ಈ ರೀತಿ ಅಭಿಯಾನದ ಮೂಲಕ ಕೆಲಸ ಆಗಿದ್ದನ್ನು ಮೊದಲು ನೋಡುತ್ತಿದ್ದೇನೆ ಎಂದರು.
|
10 |
+
ರಸ್ತೆಗುಂಡಿ ಮುಚ್ಚಿರುವ ಗುಣಮಟ್ಟ ಪರಿಶೀಲನೆ ಮಾಡುತ್ತೇನೆ. ಜೊತೆಗೆ ರಾತ್ರಿ ವೇಳೆ ನಗರ ಪ್ರದಕ್ಷಿಣೆ ಹಮಿಕೊಳ್ಳುತ್ತೇನೆ. ಎಲ್ಲೆಲ್ಲಿ ಗುಂಡಿ ಮುಚ್ಚಿದ್ದಾರೆ, ಎಲ್ಲೆಲ್ಲಿ ಬಾಕಿ ಇದೆ ಎಂಬುದನ್ನು ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.
|
11 |
+
ಮಧ್ಯದಲ್ಲಿ ಮಳೆ ಹಾಗೂ ಇತರ ಸಮಸ್ಯೆಗಳಿಂದಾಗಿ ನಿಧಾನವಾಗಿ ಕೆಲಸಗಳಾಗಿವೆ. ಏನೇ ಆದರೂ ನಮ ಬದ್ಧತೆಯಂತೆ ನಾಗರಿಕರಿಗೆ ಉತ್ತಮ ಸೌಲಭ್ಯ ಒದಗಿಸಲಾಗುತ್ತದೆ. ಬೇರೆ ರಾಜ್ಯಗಳಲ್ಲಿ ಹಾಗೂ ನಗರಗಳಲ್ಲಿನ ಪರಿಸ್ಥಿತಿ ನೋಡಿದರೆ ಅವಮಾನವಾಗುತ್ತದೆ. ಬೇರೆ ರಾಜ್ಯಗಳಿಗಿಂತ ನಮಲ್ಲಿ ಉತ್ತಮ ವ್ಯವಸ್ಥೆ ಇದೆ ಎಂದರು.
|
eesanje/url_46_13_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರೇಪ್ ಕೇಸ್ : ಶಾಸಕ ಮುನಿರತ್ನಗೆ 14 ದಿನದ ನ್ಯಾಯಾಂಗ ಬಂಧನ
|
2 |
+
: 14-
|
3 |
+
ಬೆಂಗಳೂರು,ಸೆ.21-ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ 14 ದಿನದ ನ್ಯಾಯಾಂಗ ಬಂಧನಕ್ಕೊಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.
|
4 |
+
ಶುಕ್ರವಾರ ರಾಮನಗರ ಜಿಲ್ಲೆ ಕಗ್ಗಲಿಪುರ ಠಾಣೆ ಪೊಲೀಸರು ಸತತ 10 ಗಂಟೆ ಸುದೀರ್ಘ ವಿಚಾರಣೆಯ ನಂತರ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಆರೋಪಿ ಮುನಿರತ್ನ ಅವರನ್ನು 14 ದಿನಗಳ ಕಾಲ ಅಂದರೆ ಅ.5ರವರೆಗೆ ನ್ಯಾಯಾಂಗ ಬಂಧಕ್ಕೆ ಒಪ್ಪಿಸಿ ಆದೇಶ ನೀಡಿದರು.
|
5 |
+
ಆರೋಪಿಯನ್ನು ಪೊಲೀಸರು ವಶಕ್ಕೆ ನೀಡಬೇಕೇ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದಾಗ ಈಗಾಗಲೇ ಪ್ರಕರಣ ಸಂಬಂಧ ಸ್ಥಳ ಮಹಜರು ವಿಚಾರಣೆ ನಡೆಸಲಾಗಿದೆ ಎಂದು ವಕೀಲರು ಹೇಳಿದರು.ಈ ಹಿನ್ನಲೆಯಲ್ಲಿ ಮುನಿರತ್ನಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ತಕ್ಷಣವೇ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಲಾಯಿತು.
|
6 |
+
ಮೂರು ದಿನಗಳ ಹಿಂದೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರನಿಗೆ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮುನಿರತ್ನಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಶುಕ್ರವಾರ ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಬರುತ್ತಿದ್ದಂತೆ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.
|
eesanje/url_46_140_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಇನ್ನೆರೆಡು ದಿನ ಭಾರಿ ಮಳೆ
|
2 |
+
ಬೆಂಗಳೂರು, ಮೇ 20-ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತ, ಮೇಲೈ ಸುಳಿಗಾಳಿ ಸೇರಿದಂತೆ ವಾತಾವರಣದಲ್ಲಿ ಉಂಟಾಗಿರುವ ಪ್ರಮುಖ ಬದಲಾವಣೆಗಳಿಂದ ರಾಜ್ಯದ ದಕ್ಷಿಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನೆರೆಡು ದಿನ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.
|
3 |
+
ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಆ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿವೆ. ದಕ್ಷಿಣ ಒಳನಾಡಿನಲ್ಲಿ ಹೆಚ್ಚೂ ಕಡಿಮೆ ಇದೇ ರೀತಿ ಒಂದು ವಾರ ಕಾಲ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
|
4 |
+
ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಿದೆ. ಕೆಲವೆಡೆ ಭಾರೀ ಮಳೆಯಾಗಿದ್ದರೆ, ಕೆಲವೆಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಇನ್ನು ಮುಂದಿನ ದಿನಗಳಲ್ಲೂ ಹೆಚ್ಚಾಗುವ ಮುನ್ಸೂಚನೆಗಳಿವೆ.
|
5 |
+
ನಿರಂತರ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ಜಮೀನು ಸಿದ್ಧತೆ ಮಾಡುವ ಕಾರ್ಯದಲ್ಲಿ ರೈತ ಸಮುದಾಯ ತೊಡಗಿದೆ.ಭಾಗಶಃ ಮೋಡ ಕವಿದಿರುವ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಆದರೂ ಕೆಲವೊಮ್ಮೆ ಆಗೊಮ್ಮೆ, ಈಗೊಮ್ಮೆ ಮಳೆ ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
|
6 |
+
ನೈರುತ್ಯ ಮುಂಗಾರು ಮೇ 31ಕ್ಕೆ ಕೇರಳ, ಕರಾವಳಿ ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದಕ್ಕೆ ಪೂರಕವಾಗಿ ಬಂಗಾಳಕೊಲ್ಲಿ ಹಾಗೂ ಅರಬ್ಬಿಸಮುದ್ರದಲ್ಲಿ ವಾತಾವರಣ ಮಾರ್ಪಾಡಾಗುತ್ತಿದ್ದು, ಈ ಸಮಯದಲ್ಲಿ ಸಾಕಷ್ಟು ಮಳೆಯಾಗಲಿದೆ.
|
7 |
+
ನಿರೀಕ್ಷೆಯಂತೆ ಮೇ ಅಂತ್ಯಕ್ಕೆ ಮುಂಗಾರು ಕೇರಳ ಪ್ರವೇಶಿಸಿದರೆ ಅನಂತರ ಎರಡು-ಮೂರು ದಿನಗಳಲ್ಲಿ ರಾಜ್ಯವನ್ನು ಮುಂಗಾರು ಪ್ರವೇಶಿಸಲಿದೆ. ಬಳಿಕ ಒಂದು ವಾರದೊಳಗೆ ರಾಜ್ಯಾದ್ಯಂತ ಮುಂಗಾರು ವ್ಯಾಪಿಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
|
eesanje/url_46_140_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಇಂಜಿನಲ್ಲಿ ಬೆಂಕಿ : ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ
|
2 |
+
ಬೆಂಗಳೂರು, ಮೇ 19-ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
|
3 |
+
ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ತಕ್ಷಣ ಸ್ಥಳಾಂತರಿಸಲಾಗಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ. ಮೂಲಗಳ ಪ್ರಕಾರ, ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಚ್ಚತ್ತ ವಿಮಾನದ ಸಿಬ್ಬಂದಿ ಸದಸ್ಯರು ಏರ್ ಟ್ರಾಫಿಕ್ ಕಂಟ್ರೋಲರ್ಗೆ ಎಚ್ಚರಿಕೆ ಸಂದೇಶ ನೀಡಿದ ಮಂತರ ಮತ್ತುಪ್ರಮಾಣದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ವಕ್ತಾರರು ತಿಳಿಸಿದ್ದಾರೆ.
|
4 |
+
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಮತೆ ಕೂಡಲೇ ಬೆಂಕಿಯನ್ನು ನಂದಿಸಲಾಯಿತು ಎಂದು ಹೇಳಿದರು. ನಿನ್ನೆ ರಾತ್ರಿ11.30ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಕೊತ್ತು ಮೇಲೆ ಹಾರಿತ್ತು ಕೆಲವೇ ನಿಮಿಷದಲ್ಲಿ ಒಂದು ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಶುರುವಾಗಿದೆ ಕೂಡಲೆ ಹಿಂತಿರುಗಲು ಸೂಚಿಸಿ ಯಾವುದೇ ಅನಾಹುತ ಸಂಭವಿಸದೆ ವಿಮಾನ ಲ್ಯಾಂಡಿಂಗ್ ಆಗಿದೆ.
|
5 |
+
ಯಾವುದೇ ಅತಿಥಿಗಳಿಗೆ ಯಾವುದೇ ಗಾಯಗಳಿಲ್ಲ ,ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ ಮತ್ತು ನಮ್ಮ ಅತಿಥಿಗಳು ತಮ ಗಮ್ಯಸ್ಥಾನವನ್ನು ಆದಷ್ಟು ಬೇಗ ತಲುಪಲು ಪರ್ಯಾಯ ವ್ಯವಸ್ಥೆಗಳನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಅದು ಹೇಳಿದೆ. ವಿಮಾನವನ್ನು ಸ್ಥಳಾಂತರಿಸಿ ,ಘಟನೆಗೆ ಕಾರಣ ತಿಳಿಯಲು ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ.
|
eesanje/url_46_140_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು
|
2 |
+
ಬೆಂಗಳೂರು,ಮೇ 18-ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಹೇಳಿದರು. ಪ್ರಜ್ವಲ್ ರೇವಣ್ಣ ಮೇಲೆ ಆರೋಪ ಕೇಳಿ ಬಂದ ನಂತರ ಮೊದಲ ಬಾರಿಗೆ ಮೌನ ಮುರಿದು ಮಾಧ್ಯಮದವರೊಂದಿಗೆ ಮಾತನಾಡಿದ ಗೌಡರು, ಈ ವಿಚಾರದಲ್ಲಿ ಆರೋಪ ಕೇಳಿಬಂದಿರುವ ಎಲ್ಲರ ಮೇಲೂ ಕ್ರಮವಾಗಬೇಕು ಎಂದಿದ್ದಾರೆ.
|
3 |
+
ಮಾಜಿ ಸಚಿವ ಎಚ್.ರೇವಣ್ಣ ಅವರ ಮೇಲೆ ಮಾಡಿರುವ ಆರೋಪಗಳು ಆಧಾರರಹಿತವಾಗಿದ್ದು, ಆ ವಿಚಾರ ನ್ಯಾಯಾಲಯದ ಮುಂದೆ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು. ನಮ್ಮ ಕುಟುಂಬಕ್ಕೆ ಹಿನ್ನಡೆ ಮಾಡಲು ಈ ಪ್ರಕರಣದಲ್ಲಿ ಬಹಳ ಜನರಿರುವುದು ನಿಜ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆರೋಪದ ಬಗ್ಗೆ ಏನು ಮಾಡಬೇಕೆಂಬುದನ್ನು ಈಗಾಗಲೇ ಹೇಳಿದ್ದಾರೆ ಎಂದರು.
|
4 |
+
ಪ್ರಸಕ್ತ ಲೋಕಸಭಾ ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದ್ದು, ಫಲಿತಾಂಶ ಬಂದ ನಂತರ ಹೆಚ್ಚಿನ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ ಅವರು, ಅಲ್ಲಿಯವರೆಗೆ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
|
5 |
+
ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದ ಕೂಡಲೇ ಕುಮಾರಸ್ವಾಮಿಯವರು ಯಾವುದೇ ಚ್ಯುತಿಯಿಲ್ಲದ ರೀತಿಯಲ್ಲಿ ಸಂಬಂಧಪಟ್ಟವರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಸೇರಿದಂತೆ ಸಂಬಂಧಪಟ್ಟ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ ಎಂದರು.
|
6 |
+
ವಕೀಲ ದೇವರಾಜೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಮಾಡಿರುವ ಆರೋಪ ಸೇರಿದಂತೆ ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ವರಾಜೇಗೌಡ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳ ಮೂಲಕ ನೋಡಿದ್ದೇವೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ಕುಮಾರಸ್ವಾಮಿಯವರೇ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹೇಳಿದರು.
|
7 |
+
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಯಾವುದೇ ವಿಚಾರ ಬಂದರೂ ಹೋರಾಟ ಮಾಡುವ ಛಲ ಇದೆ. ನಾನು ಲೋಕಸಭಾ ಚುನಾವಣೆಯಲ್ಲಿ ನಾನು ಎಲ್ಲಾ ಕಡೆ ಪ್ರಚಾರವನ್ನು ಮಾಡಿದ್ದು, ಫಲಿತಾಂಶವನ್ನು ನಿರೀಕ್ಷಿಸುತ್ತಿರುವುದಾಗಿ ತಿಳಿಸಿದರು.
|
eesanje/url_46_140_12.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಅಂಜಲಿ ಕೊಲೆ ಆರೋಪಿ ಗಿರೀಶ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು
|
2 |
+
ಹುಬ್ಬಳ್ಳಿ, ಮೇ 18-ಅಂಜಲಿ ಕೊಲೆ ಆರೋಪಿ ಗಿರೀಶ್ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮಗಳಿಗೆ ಕಿರುಕುಳ ಕೊಟ್ಟು, ಚಿನ್ನಾಭರಣಗಳನ್ನು ಪಡೆದುಕೊಂಡಿದ್ದಾನೆ ಎಂದು ಅಪ್ರಾಪ್ತ ಬಾಲಕಿಯ ಪೋಷಕರು ಆರೋಪಿ ಗಿರೀಶ್ ವಿರುದ್ಧ ದೂರು ನೀಡಿದ್ದಾರೆ.
|
3 |
+
ಕಳೆದ ಆರು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ವಂಚಿಸಿ ಮೋಸ ಮಾಡಿದ್ದ ಹಂತಕ ಗಿರೀಶ ಐದುವರೆ ತೊಲೆ ಬಂಗಾರ ಪಡೆದು ಮೋಸ ಮಾಡಿದ್ದು ಆತನಿಂದ ಒಡವೆಗಳನ್ನು ಕೊಡಿಸಬೇಕು ಹಾಗೂ ಆತನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
|
4 |
+
ಪ್ರಕರಣ ದಾಖಲಿಸಿಕೊಂಡೊರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇ. 15ರಂದು ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿಗೆೆ ಆರೋಪಿ ಗಿರೀಶ್ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿದ್ದನು.
|
eesanje/url_46_140_2.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಾನಾ ಅವಾಂತರ ಸೃಷ್ಟಿಸಿದ ಭಾರಿ ಮಳೆ
|
2 |
+
ಬೆಂಗಳೂರು, ಮೇ 19-ರಾಜಧಾನಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರಾತ್ರಿ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿದೆ. ನಗರದ ವಿವಿಧೆಡೆ ಮಳೆಯಾಗಿದ್ದು, ಯಲಹಂಕದ ಸುತ್ತಮುತ್ತ ಭಾರಿ ಮಳೆಯಾದ ಪರಿಣಾಮ ನಾರ್ತ್ ವುಡ್ ಅಪಾರ್ಟ್ಮೆಂಟ್ ಸಂಪೂರ್ಣ ಜಲಾವೃತಗೊಂಡು ದ್ವೀಪದಂತಾಗಿದೆ.
|
3 |
+
ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಮಾಡಿರುವುದರಿಂದ ರಾಜಕಾಲುವೆಯಿಂದ ನೀರು ವಿಲ್ಲಾ ಮತ್ತು ಅಪಾರ್ಟ್ಮೆಂಟ್ಗೆ ನುಗ್ಗಿದ್ದು, ನಿವಾಸಿಗಳು ಮನೆಯಿಂದ ಹೊರಬರದಂತಾಗಿ ಜಲದಿಗ್ಬಂಧನಕ್ಕೊಳಗಾಗಿದ್ದರು. ಜೊತೆಗೆ ರಾಜಕಾಲುವೆಯಿಂದ ನೀರಿನ ವಾಸನೆಗೆ ಜನರು ಕಂಗಾಲಾಗಿ ಬಿಟ್ಟಿದ್ದಾರೆ.
|
4 |
+
ಮೋಟಾರು ಅಳವಡಿಸಿ ಸಂಗ್ರಹವಾಗಿದ್ದ ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ಒಂದು ವಾರದ ಹಿಂದೆಯೇ ಪಾಲಿಕೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜಕಾಲುವೆಯಿಂದ ನೀರು ತುಂಬಿ ನುಗ್ಗಿರುವುದರಿಂದ ಸಂಕಷ್ಟ ಎದುರಾಗಿತ್ತು.
|
5 |
+
ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ನೀರು ನುಗ್ಗಿ ಹಾಳಾಗಿವೆ. ಒಟ್ಟಿನಲ್ಲಿ ರಾತ್ರಿಯಿಡೀ ಅಪಾರ್ಟ್ಮೆಂಟ್ನ ನಿವಾಸಿಗಳು ಪರದಾಡುವಂತಾಗಿತ್ತು. ಕೆರೆಯಂತಾಗಿದ್ದ ನೀರು ತೆರವಿಗೆ ಬಂದ ಪಾಲಿಕೆ ಸಿಬ್ಬಂದಿಗಳ ವಿರುದ್ಧ ಆಕ್ರೋಶ ಹೊರಹಾಕಿದ ಅಲ್ಲಿನ ನಿವಾಸಿಗಳು ಶಾಶ್ವತವಾಗಿ ಪರಿಹಾರ ಕಲ್ಪಿಸಿ, ಪ್ರತಿಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮೊದಲು ರಾಜಕಾಲುವೆಗಳನ್ನು ಸ್ವಚ್ಛ ಮಾಡಿ ಎಂದು ಒತ್ತಾಯಿಸಿದರು.
|
6 |
+
ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಲ್ಲಲ್ಲಿ ಮಳೆಯಾಗಿದೆ.ಉಡುಪಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ವಿದ್ಯುತ್ ಕಂಬಗಳು ಧರೆಗುರುಳಿದ್ದು, ತಂತಿ ತುಳಿದು ಇರ್ಷಾದ್ (56) ಎಂಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಶಿರೂರಿನಲ್ಲಿ ನಡೆದಿದೆ.
|
7 |
+
ಕಾಫಿನಾಡು ಚಿಕ್ಕಮಗಳೂರಿನಲ್ಲೂ ಸಹ ಭಾರಿ ಮಳೆಯಾಗಿದ್ದು, ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕಾಂಪೌಂಡ್ ಕುಸಿದು ಬಿದ್ದು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ತಾಲ್ಲೂಕಿನ ಕಸ್ಕೆ ಗ್ರಾಮದಲ್ಲಿ ಭಾರೀ ಮರವೊಂದು ಮನೆಯ ಮೇಲೆ ಬಿದ್ದಿದ್ದು ಸಾಕಷ್ಟು ಹಾನಿ ಸಂಭವಿಸಿದೆ.
|
8 |
+
ಶಿವಮೊಗ್ಗದಲ್ಲೂ ಸಹ ಭಾರೀ ಮಳೆಯಾಗಿದ್ದು, ಮದುವೆ ಛತ್ರಕ್ಕೆ ನೀರು ನುಗ್ಗಿದ್ದು ಬಂದು ಬಳಗ, ನೆಂಟರಿಷ್ಟರಿಗೆ ತೀವ್ರ ತೊಂದರೆಯಾಗಿತ್ತು. ಒಂದೆಡೆ ಛತ್ರದ ಸಿಬ್ಬಂದಿಗಳು ನೀರನ್ನು ಹೊರಹಾಕಿದರು. ಸಕ್ಕರೆನಾಡು ಮಂಡ್ಯದಲ್ಲೂ ಸಹ ಉತ್ತಮ ಮಳೆಯಾಗಿದ್ದು, ಕೆ.ಆರ್.ಪೇಟೆ ತಾಲ್ಲೂಕಿನ ಜಕ್ಕನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿ ತೊಂದರೆಯುಂಟಾಗಿತ್ತು. ಭಾರೀ ಮಳೆಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
|
9 |
+
ತುಮಕೂರು ಜಿಲ್ಲೆಯಲ್ಲೂ ಸಹ ಮಳೆಯಾಗಿದ್ದು, ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಲ್ಲಿನ ಜನರು ಪರದಾಡುವಂತಾಗಿದೆ. ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿ ಗ್ರಾಮದಲ್ಲಿ ಕೊರಟಗೆರೆ-ಗೌರಿಬಿದನೂರು ಹೆದ್ದಾರಿ ಎತ್ತರದ ಕಾಮಗಾರಿಯನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
10 |
+
ಕೋಟೆನಾಡು ಚಿತ್ರದುರ್ಗದಲ್ಲೂ ಮಳೆಯಾಗಿದ್ದು, ಹೊಸದುರ್ಗ ತಾಲೂಕಿನ ಕೆಲ್ಲೋಡು ಸೇತುವೆ ಮುಳುಗಡೆಯಾಗಿದ್ದು, ವಾಣಿವಿಲಾಸ ಸಾಗರಕ್ಕೆ ನೀರು ಹರಿಯುತ್ತಿದೆ. ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಮದ್ದೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಸೇರಿದಂತೆ ಬಯಲುಸೀಮೆ ಪ್ರದೇಶಕ್ಕೆ ವರುಣ ಕೃಪೆ ತೋರಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ.
|
11 |
+
ಇದೇ 23 ರವರೆಗೂ ರಾಜ್ಯದ ವಿವಿಧೆಡೆ ಸಾಧಾರಣ ಹಾಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
|
eesanje/url_46_140_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಶ್ರೀಮಂತರ ಸಾಲ ಮನ್ನಾ ದೇಶಕ್ಕೆ ಲಾಭವಾಗುತ್ತಿದೆಯೇ..? : ಕಾಂಗ್ರೆಸ್ ಪ್ರಶ್ನೆ
|
2 |
+
ಬೆಂಗಳೂರು, ಮೇ 19-ಬಡವರ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಯೋಜನೆಗಳಿಂದ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಪ್ರತಿಪಾದಿಸುವ ಪ್ರಧಾನಿಯವರಿಗೆ ಶ್ರೀಮಂತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಲಾಭವಾಗುತ್ತಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
|
3 |
+
ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷ ಶ್ರೀಮಂತ ಉದ್ಯಮಿಗಳ 20 ಲಕ್ಷ ಕೋಟಿ ಸಾಲವನ್ನು ರೈಟಾಫ್ ಮಾಡಿದರೆ ದೇಶದ ಪ್ರಗತಿಗೆ ಮಾರಕ ಆಗಲಿಲ್ಲವೇ? ಎಂದು ಕಿಡಿಕಾರಿದೆ.
|
4 |
+
ಶ್ರೀಮಂತ ಉದ್ಯಮಿಗಳ 20 ಲಕ್ಷ ಕೋಟಿ ಸಾಲವನ್ನು ರೈಟಾಫ್ ಮಾಡಿದರೆ ದೇಶದ ಪ್ರಗತಿಗೆ ಮಾರಕ ಆಗಲಿಲ್ಲವೇ?ಶ್ರೀಮಂತ ಉದ್ಯಮಿಗಳ ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ದೇಶದ ಬೊಕ್ಕಸಕ್ಕೆ ವಾರ್ಷಿಕ 1.5 ಲಕ್ಷ ಕೋಟಿ ನಷ್ಟವಾಗುತ್ತಿರುವುದು ದೇಶದ ಪ್ರಗತಿಗೆ ಮಾರಕವಲ್ಲವೇ?ಮಾಲ್ಡಿವ್ಸ್, ಅಪಘಾನಿಸ್ತಾನ್, ಭೂತಾನ್ ಸೇರಿದಂತೆ ವಿದೇಶಗಳಿಗೆ ಸಾವಿರಾರು…../
|
5 |
+
ಶ್ರೀಮಂತ ಉದ್ಯಮಿಗಳ ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ದೇಶದ ಬೊಕ್ಕಸಕ್ಕೆ ವಾರ್ಷಿಕ 1.5 ಲಕ್ಷ ಕೋಟಿ ನಷ್ಟವಾಗುತ್ತಿರುವುದು ದೇಶದ ಪ್ರಗತಿಗೆ ಮಾರಕವಲ್ಲವೇ? ಮಾಲ್ಡಿವ್ಸ್, ಅಪಘಾನಿಸ್ತಾನ್, ಭೂತಾನ್ ಸೇರಿದಂತೆ ವಿದೇಶಗಳಿಗೆ ಸಾವಿರಾರು ಕೋಟಿ ಹಣ ನೀಡಿದರೆ ದೇಶದ ಪ್ರಗತಿಗೆ ಮಾರಕವಲ್ಲವೇ? ಪ್ರಧಾನಿ ಓಡಾಟಕ್ಕೆ 8 ಸಾವಿರ ಕೋಟಿ ಕೊಟ್ಟು ವಿಮಾನ ಖರೀದಿಸಿದರೆ ಪ್ರಗತಿಗೆ ಮಾರಕವಲ್ಲವೇ? ಎಂದು ಪ್ರಶ್ನಿಸಿದೆ.
|
6 |
+
ಅಂದಾಜು 5,000 ಕೋಟಿ ವೆಚ್ಚದ ಉಚಿತ ಪ್ರಯಾಣದ ಯೋಜನೆಯ ಬಗ್ಗೆ ಇಷ್ಟು ಅಸಹನೆ ಹೊಂದಿರುವ ಮೋದಿಯವರ ಜನವಿರೋಧಿ ನಿಲುವು ಜನತೆಗೆ ಅರ್ಥವಾಗಿದೆ ಎಂದು ತಿರುಗೇಟು ನೀಡಿದೆ.
|
eesanje/url_46_140_4.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಾಳೆಗೆ ವರ್ಷ ಪೂರೈಸಲಿದೆ ಗ್ಯಾರಂಟಿ ಸರ್ಕಾರ, ಸಂಭ್ರಮಾಚರಣೆಗೆ ನೀತಿ ಸಂಹಿತೆ ಅಡ್ಡಿ
|
2 |
+
ಬೆಂಗಳೂರು, ಮೇ 19-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಳೆಗೆ ವರ್ಷವಾಗಲಿದ್ದು, ನೀತಿ ಸಂಹಿತೆ ಹಿನ್ನೆಲೆಯಿಂದಾಗಿ ಮೊದಲ ವಾರ್ಷಿಕೋತ್ಸವದ ಆಚರಣೆಯನ್ನು ತಡೆಹಿಡಿಯಲಾಗಿದೆ.
|
3 |
+
2023 ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13 ರಂದು ಪ್ರಕಟವಾಗಿತ್ತು. ಕಾಂಗ್ರೆಸ್ನ 135 ಶಾಸಕರು ಆಯ್ಕೆಯಾಗಿದ್ದರು. ಒಬ್ಬರು ಸ್ವತಂತ್ರ, ನಾಲ್ವರು ಪಕ್ಷೇತರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರ ಮುಖ್ಯಮಂತ್ರಿ ಆಯ್ಕೆಗೆ ಭಾರೀ ಕಸರತ್ತುಗಳು ನಡೆದಿದ್ದವು.
|
4 |
+
ದೆಹಲಿಯಲ್ಲಿ ಒಂದು ವಾರ ಕಾಲ ನಡೆದ ಚರ್ಚೆಯಲ್ಲಿ ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಮಣೆ ಹಾಕಿತ್ತು. ಕೆಪಿಸಿಸಿ ಅಧ್ಯಕ್ಷರೂ ಆಗಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಲೋಕಸಭಾ ಚುನಾವಣೆವರೆಗೂ ಪಕ್ಷದ ಹೊಣೆಗಾರಿಕೆಯ ಜೊತೆ ಉಪಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿಯನ್ನು ವಹಿಸಲಾಗಿತ್ತು.
|
5 |
+
ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಳೆದ ಕೆಲ ತಿಂಗಳ ಹಿಂದೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಿಸಿದೆ. ಪ್ರಸ್ತುತ ಲೋಕಸಭಾ ಚುನಾವಣೆ ನಡೆದಿದ್ದು, ಫಲಿತಾಂಶ ವನ್ನು ನಿರೀಕ್ಷಿಸಲಾಗುತ್ತಿದೆ.
|
6 |
+
ಈ ನಡುವೆ ಕಳೆದ ವರ್ಷ ಪೂರ್ವ ಮುಂಗಾರು ಹಾಗೂ ಮುಂಗಾರಿನ ಮಳೆ ಕೊರತೆಯಿಂದಾಗಿ ತೀವ್ರ ಬರಗಾಲ ಎದುರಾಗಿತ್ತು. ಕಳೆದ ಅಕ್ಟೋಬರ್ನಲ್ಲಿ ರಾಜ್ಯಸರ್ಕಾರ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಆರ್ಥಿಕ ನೆರವು ದೊರೆಯದಿದ್ದಾಗ ಸುಪ್ರೀಂಕೋರ್ಟ್ ಮೆಟ್ಟಿಲೇರಿ ಕಾನೂನು ಸಂಘರ್ಷದ ಮೂಲಕ 3,600 ಕೋಟಿ ರೂ. ಪರಿಹಾರ ಪಡೆದುಕೊಂಡು ಬೆಳೆನಷ್ಟ ಅನುಭವಿಸಿದ ರೈತರಿಗೆ ಹಂಚಿಕೆ ಮಾಡುತ್ತಿದೆ. ಅದಕ್ಕೂ ಮುನ್ನ ರಾಜ್ಯಸರ್ಕಾರವೇ ತನ್ನ ಬೊಕ್ಕಸದಿಂದ 34 ಲಕ್ಷ ರೈತರಿಗೆ 600 ಕೋಟಿ ರೂ.ಗಳನ್ನು ಜಮಾ ಮಾಡಿತ್ತು. ಕುಡಿಯುವ ನೀರು, ಮೇವು, ಉದ್ಯೋಗ ಸೃಷ್ಟಿಗೆ 800 ಕೋಟಿ ರೂ.ಗೂ ಹೆಚ್ಚಿನ ಅನುದಾನವನ್ನು ಬಳಕೆ ಮಾಡಲಾಗಿದೆ.
|
7 |
+
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣ ಎಂದು ಭಾವಿಸಲಾಗಿರುವ ಪಂಚಖಾತ್ರಿ ಯೋಜನೆಗಳ ಯಶಸ್ವಿ ಅನುಷ್ಠಾನ ಸಿದ್ದರಾಮಯ್ಯನವರ ಸರ್ಕಾರದ ಹೆಗ್ಗಳಿಕೆಯಾಗಿದೆ.ಮೊದಲ ಸಚಿವ ಸಂಪುಟ ಸಭೆಯಲ್ಲೇ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. 6 ತಿಂಗಳೊಳಗಾಗಿ ಎಲ್ಲಾ ಯೋಜನೆಗಳನ್ನೂ ಹಂತಹಂತವಾಗಿ ಅನುಷ್ಠಾನಗೊಳಿಸಲಾಗಿದೆ.
|
8 |
+
ಸರ್ಕಾರದ ನೀತಿ ಅಂಶಗಳ ಪ್ರಕಾರ, ರಾಜ್ಯದ ಶೇ.80 ರಷ್ಟು ಜನ ಅಂದರೆ, ಸರಿಸುಮಾರು 4.50 ಕೋಟಿ ಮಂದಿಗೆ ಪಂಚಖಾತ್ರಿ ಯೋಜನೆ ತಲ��ಪಿವೆ. ಬೆಲೆ ಏರಿಕೆಯಿಂದ ತತ್ತರಿಸಿದವರಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ವರದಾನ ಎಂದು ಭಾವಿಸಲಾಗಿದೆ.ಇದರ ನಡುವೆ ರಾಜ್ಯಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಹಣ ನೀಡಿಲ್ಲ ಎಂಬ ಆಕ್ಷೇಪವನ್ನೂ ವಿಪಕ್ಷಗಳು ಮಾಡಿವೆ. ಮದ್ಯದ ಬೆಲೆ, ಸ್ಟ್ಯಾಂಪ್ ಡ್ಯೂಟಿ, ಮೋಟಾರು ವಾಹನ ತೆರಿಗೆ ಸೇರಿದಂತೆ ಕೆಲವು ಸೇವಾಶುಲ್ಕಗಳನ್ನು ಹೆಚ್ಚಿಸಲಾಗಿದೆ ಎಂಬ ಟೀಕೆಗಳು ಇವೆ.
|
9 |
+
ಇತ್ತೀಚೆಗೆ ಹುಬ್ಬಳ್ಳಿಯ ನೇಹಾ ಮತ್ತು ಅಂಜಲಿ, ಕೊಡಗಿನ ಮೀನಾ ಅವರ ಕೊಲೆ ಪ್ರಕರಣಗಳು ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆಯ ಸವಾಲಿನ ಪ್ರಶ್ನೆಯನ್ನು ಮುಂದಿಟ್ಟಿವೆ. ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರಕ್ಕೆ ಕಗ್ಗಂಟಾಗಿದೆ. ಬಿಜೆಪಿ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಂಬ ಕೂಗೆಬ್ಬಿಸಿ ಸರ್ಕಾರಕ್ಕೆ ಮಸಿ ಬಳಿಯುವ ಪ್ರಯತ್ನವನ್ನು ನಡೆಸಿತ್ತು. ಇದೆಲ್ಲಾ ಸಿಹಿ-ಕಹಿಗಳ ನಡುವೆ ಸಿದ್ದರಾಮಯ್ಯ ಅವರ ಸರ್ಕಾರ ಯಾವುದೇ ಆತಂಕವಿಲ್ಲದೆ, ಒಂದು ವರ್ಷ ಸುಭದ್ರ ಆಡಳಿತ ನಡೆಸಿದೆ.
|
10 |
+
ಕಾಂಗ್ರೆಸ್ ಹೊರವಲಯದಲ್ಲಿ ಜಾತಿವಾರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಚರ್ಚೆಗಳು ಶುರುವಾಗಿದೆ. ಹೈಕಮಾಂಡ್ ಆರಂಭದಲ್ಲೇ ಅದಕ್ಕೆ ಬ್ರೇಕ್ ಹಾಕಿತ್ತು. ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ, ನಾಯಕತ್ವ ಬದಲಾವಣೆಗಳ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ.
|
11 |
+
ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಬರದ ತೀವ್ರತೆ ತಗ್ಗಿದೆ ಎಂದು ಹೇಳಲಾಗುತ್ತಿದೆ. ಆದರೆ ರಾಜಕೀಯ ಅಧಿಕಾರದ ಸಂಘರ್ಷ ಯಾವ ಕ್ಷಣದಲ್ಲಾದರೂ ಸ್ಫೋಟಗೊಳ್ಳುವ ಆತಂಕವಿದೆ. ಅತೃಪ್ತ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಸಮಾಧಾನಪಡಿಸಲಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡು ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ವಾರ್ಷಿಕೋತ್ಸವದ ಆಚರಣೆಗೆ ಸಿದ್ಧತೆಗಳಾಗಿವೆ.
|
eesanje/url_46_140_5.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ಸಿಗರ ಕೈವಾಡವಿಲ್ಲ : ಶಿವರಾಮೇಗೌಡ ಸ್ಪಷ್ಟನೆ
|
2 |
+
ಬೆಂಗಳೂರು, ಮೇ 19-ಬಿಜೆಪಿ ಮುಖಂಡ ದೇವರಾಜೇಗೌಡ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ಗಳನ್ನು ವ್ಯಾಪಾರಕ್ಕಿಟ್ಟಿದ್ದಾರೆ. ಇಡೀ ಪ್ರಕರಣದಲ್ಲಿ ನನ್ನದಾಗಲೀ, ಡಿ.ಕೆ.ಶಿವಕುಮಾರ್ ಅವರದಾಗಲೀ ಅಥವಾ ಸಚಿವರ ಕೈವಾಡ ಇಲ್ಲ ಎಂದು ಮಾಜಿ ಸಚಿವ ಎಲ್.ಆರ್.ಶಿವರಾಮೇಗೌಡ ತಿಳಿಸಿದರು.
|
3 |
+
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರಾಜೇಗೌಡರನ್ನು ತಾವು ನೋಡಿರಲೇ ಇಲ್ಲ, ಅವರ ಸಂಪರ್ಕವೂ ಇರಲಿಲ್ಲ, ಪೆನ್ಡ್ರೈವ್ ಪ್ರಕರಣ ಹೊರಬಂದ ಬಳಿಕ ಅವರನ್ನು ನಾನು ಟಿವಿಯಲ್ಲಿ ನೋಡಿದ್ದು. ಅನಂತರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿಸುವಂತೆ ನನ್ನನ್ನು ಕೇಳಿದರು.
|
4 |
+
ಹಾಗಾಗಿ ದೂರವಾಣಿಯಲ್ಲಿ ಮಾತನಾಡಿಸಿದ್ದೆ. ಅದೇ ಮಹಾಪರಾಧವಾಗಿದೆ. ದೇವರಾಜೇಗೌಡ ಮೋಸಗಾರ. ಆತನ ಜೊತೆ ಮಾತನಾಡುವಾಗ ಜನ ಎಚ್ಚರಿಕೆಯಿಂದಿರಬೇಕು. ಆತನ ಇಡೀ ದೇಹದಲ್ಲಿ ಇನ್ನೊಬ್ಬರು ಮಾತನಾಡುವುದನ್ನು ರೆಕಾರ್ಡ್ ಮಾಡಿಕೊಳ್ಳುವ ವ್ಯವಸ್ಥೆ ಇಟ್ಟುಕೊಂಡಿರುತ್ತಾನೆ ಎಂದು ಹೇಳಿದರು.
|
5 |
+
100 ಕೋಟಿ ಆಫರ್ ನೀಡಲಾಗಿತ್ತು. ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು ಎಂದೆಲ್ಲಾ ಹೇಳಿಕೆ ನೀಡುತ್ತಿರುವ ದೇವರಾಜೇಗೌಡ, ಆರಂಭದಲ್ಲೇ ಇವುಗಳ ಬಗ್ಗೆ ಏಕೆ ಮಾತನಾಡಲಿಲ್ಲ? ಡಿ.ಕೆ.ಶಿವಕುಮಾರ್ರವರ ಜೊತೆಗಿನ ಮಾತುಕತೆಯನ್ನು ಪೂರ್ಣ ಪ್ರಮಾಣದಲ್ಲಿ ಬಹಿರಂಗ ಮಾಡದೇ ತನಗೆ ಬೇಕಾದಷ್ಟನ್ನು ಮಾತ್ರ ಹೊರಗೆ ಬಿಟ್ಟು ರಾಜಕೀಯ ಲಾಭ ಪಡೆಯುವ ಯತ್ನ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
6 |
+
ಸಂಪುಟದ ಸಚಿವರಾಗಲೀ, ಡಿ.ಕೆ.ಶಿವಕುಮಾರ್ರವರ ಪಾತ್ರವಾಗಲೀ ಪೆನ್ಡ್ರೈವ್ ಪ್ರಕರಣದಲ್ಲಿಲ್ಲ. ನನ್ನ ಹೆಸರನ್ನು ಅನಗತ್ಯವಾಗಿ ಇನ್ನು ಮುಂದೆ ಈ ಪ್ರಕರಣದಲ್ಲಿ ಬಳಸಬೇಡಿ. ಈ ಇಳಿವಯಸ್ಸಿನಲ್ಲಿ ದೇವೇಗೌಡಿರಗೆ ಈ ಪ್ರಕರಣದಿಂದಾದ ನೋವಿನ ಬಗ್ಗೆ ನನಗೆ ವಿಶಾದವಿದೆ. ಆ ಕಾರಣಕ್ಕಾಗಿಯೇ ನಿನ್ನೆ ಅವರ ಹುಟ್ಟುಹಬ್ಬವಿದ್ದಿದ್ದರಿಂದ ನಾನು ಪತ್ರಿಕಾಗೋಷ್ಠಿ ನಡೆಸದೆ ಇಂದು ಮಾತನಾಡುತ್ತಿದ್ದೇನೆ ಎಂದು ಹೇಳಿದರು.
|
7 |
+
ಪೆನ್ಡ್ರೈವ್ ಪ್ರಕರಣದ ತನಿಖೆ ದಿಕ್ಕು ತಪ್ಪಿಸಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ದೇವರಾಜೇಗೌಡ ತಾವು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಆತಂಕದಲ್ಲಿ ಬೇರೆ ಬೇರೆ ರೀತಿಯ ಆರೋಪ ಮಾಡುತ್ತಿದ್ದಾನೆ. ಅಮಿತ್ ಶಾ, ನರೇಂದ್ರ ಮೋದಿ ಗೊತ್ತು ಎಂದು ಸುಳ್ಳು ಹೇಳುತ್ತಿದ್ದಾನೆ ಎಂದರು.
|
8 |
+
ಬಿಜೆಪಿಗೆ ರಾಜೀನಾಮೆ :ತಾವು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಎಲ್.ಆರ್.ಶಿವರಾಮೇಗೌಡರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಮೂಲತಃ ನಾನು ಕಾಂಗ್ರೆಸಿಗ. ಎರಡು ಬಾರಿ ಪಕ್ಷೇತರ ಶಾಸಕನಾಗಿ ಆಯ್ಕೆಯಾಗಿದ್ದೆ. ಎರಡು ಬಾರಿ ಬಿಜೆಪಿ ಪಕ್ಷ ಸೇರಿ ಕೆಲಸ ಮಾಡಿದ್ದೇನೆ. ಒಮೆ ಯಡಿಯೂರಪ್ಪ ಅವರು ಪಕ್ಷಕ್ಕ��� ಸೇರಿಸಿಕೊಂಡು ಎಂಪಿ ಟಿಕೆಟ್ ನೀಡಿದ್ದರು.
|
9 |
+
ಇತ್ತೀಚೆಗೆ ಬಸವರಾಜಬೊಮಾಯಿ ಪಕ್ಷಕ್ಕೆ ಸೇರಿಸಿಕೊಂಡರು. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಕಟ್ಟುವುದು ಕಷ್ಟದ ಕೆಲಸ ಎಂದು ನಾನು ಅವರಿಗೆ ಹೇಳಿದ್ದೆ. ಆದರೂ ಅವರು ಕೇಳಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರವೂ ಹೋಯಿತು, ಅವರ ನಾಯಕತ್ವದ ಪ್ರಭಾವವೂ ತಗ್ಗಿತ್ತು ಎಂದು ವಿವರಿಸಿದರು.
|
10 |
+
ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್, ಕಾಂಗ್ರೆಸ್ ಪಕ್ಷಗಳು ಪ್ರಬಲವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ 10 ರಿಂದ 40 ಸಾವಿರದವರೆಗೂ ಮತ ಪಡೆದು ಇತ್ತೀಚೆಗೆ ಚೇತರಿಕೆ ಕಾಣುತ್ತಿತ್ತು. ಆದರೆ ಜೆಡಿಎಸ್ ಮೈತ್ರಿಯಿಂದಾಗಿ ಮತ್ತಷ್ಟು ದುರ್ಬಲವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ 2 ಲಕ್ಷ ಅಂತರದಿಂದ ಗೆಲ್ಲುವ ಸಾಧ್ಯತೆಯಿದೆ ಎಂದು ಹೇಳಿದರು.
|
11 |
+
ತಾವು ಬಿಜೆಪಿಗೆ ರಾಜೀನಾಮೆ ನೀಡಿದ್ದು ವಿಜಯೇಂದ್ರ ಅವರಿಗೆ ಪತ್ರ ಕಳುಹಿಸಿದ್ದೇನೆ. ಅವರಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ. ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.
|
eesanje/url_46_140_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬಿಜೆಪಿ ನಾಯಕನ ಬಂಧನ, ಪೊಲೀಸ್ ಠಾಣೆಯಲ್ಲೇ ಧರಣಿನಡೆಸಲೆತ್ನಿಸಿದ ಶಾಸಕ ಹರೀಶ್ ಪೂಂಜಾ
|
2 |
+
ಮಂಗಳೂರು, ಮೇ 19-ಅಕ್ರಮ ಕಲ್ಲು ಕ್ವಾರಿಗೆ ಸಂಬಂಧಪಟ್ಟಂತೆ ಬಿಜೆಪಿ ನಾಯಕನನ್ನು ಬಂಧಿಸಿದ ಪೊಲೀಸರ ವಿರುದ್ಧ ಶಾಸಕ ಹರೀಶ್ ಪೂಂಜಾ ವಾಗ್ದಾಳಿ ನಡೆಸಿದ್ದು, ನಡುರಾತ್ರಿಯಲ್ಲಿ ಪೊಲೀಸ್ ಠಾಣೆಯಲ್ಲೇ ಧರಣಿ ನಡೆಸುವ ಪ್ರಯತ್ನ ಮಾಡಿದ್ದಾರೆ.
|
3 |
+
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬುವರ ಜಾಗದಲ್ಲಿ ಕಲ್ಲು ಕ್ವಾರಿ ನಡೆಯುತ್ತಿದ್ದು, ಶನಿವಾರ ಸಂಜೆ ತಹಸೀಲ್ದಾರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಕ್ವಾರಿಗೆ ಸಂಬಂಧಪಟ್ಟಂತೆ ಸಮರ್ಪಕ ದಾಖಲೆಗಳು ಇರಲಿಲ್ಲ ಎಂದು ಪತ್ತೆಯಾಗಿದೆ. ಜೊತೆಗೆ ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು. ಹಿಟಾಜಿ, ಕಂಪ್ರಸರ್ ಮಿಷನ್ ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದರು.
|
4 |
+
ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಕ್ವಾರಿ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಶಿರಾಜ ಶೆಟ್ಟಿಯನ್ನು ಬಂಧಿಸಿದ್ದಾರೆ. ತಕ್ಷಣವೇ ಬಿಜೆಪಿ ಕಾರ್ಯಕರ್ತರು ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಶಾಸಕ ಹರೀಶ್ ಪೂಂಜಾ ಸ್ಥಳಕ್ಕೆ ಆಗಮಿಸಿ ಮಧ್ಯರಾತ್ರಿ ನಮ್ಮ ಕಾರ್ಯಕರ್ತರನ್ನು ಬಂಧಿಸುವ ಅಗತ್ಯವೇನಿತ್ತು ಎಂದು ತರಾಟೆಗೆ ತೆಗೆದುಕೊಂಡರು.
|
5 |
+
ಪೊಲೀಸರು ಕಾಂಗ್ರೆಸ್ನ ಏಜೆಂಟರಂತೆ ವರ್ತಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಅವರೊಂದಿಗೆ ನಾನೂ ಪೊಲೀಸ್ ಠಾಣೆಯಲ್ಲಿ ಮಲಗುತ್ತೇನೆ ಎಂದು ಪಟ್ಟು ಹಿಡಿದರು. ಪೊಲೀಸರು ಅವರ ಮನವೊಲಿಸಲು ಹರಸಾಹಸ ಪಡಬೇಕಾಯಿತು. ಬಿಜೆಪಿ ನಾಯಕರು ಬೆಳಗಿನ ಜಾವದವರೆಗೂ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.
|
eesanje/url_46_140_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಅರೆಸ್ಟ್ ವಾರಂಟ್ ಜಾರಿ : ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ
|
2 |
+
ಬೆಂಗಳೂರು, ಮೇ 19-ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನದ ವಾರಂಟ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
|
3 |
+
ನಿನ್ನೆ ತನಿಖಾಧಿಕಾರಿಗಳು ತಲೆಮರೆಸಿಕೊಂಡಿರುವ ಪ್ರಜ್ವಲ್ ವಿರುದ್ಧ ಬಂಧನದ ವಾರಂಟ್ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿಯನ್ನು ಸ್ವೀಕರಿಸಿದ ನ್ಯಾಯಾಲಯ ಬಂಧನದ ವಾರಂಟ್ ಅನ್ನು ಜಾರಿಗೊಳಿಸಿದ್ದು, ಪ್ರಜ್ವಲ್ ಮೇಲಿನ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗಲಿದೆ.
|
4 |
+
ಈಗಾಗಲೇ ಪ್ರಜ್ವಲ್ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ಗಳನ್ನು ನೀಡಿತ್ತು. ನಂತರ ಲುಕ್ಔಟ್ ನೋಟಿಸ್ ಆಮೇಲೆ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿತ್ತು. ಆದರೂ ಪ್ರಜ್ವಲ್ ವಿದೇಶದಿಂದ ಹಿಂದಿರುಗಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈಗ ಬರುತ್ತಾರೆ, ಆಗ ಬರುತ್ತಾರೆ ಎಂದು ವಿಮಾನದ ಟಿಕೆಟ್ ಬುಕ್ ಮಾಡಿ ಕೊನೆ ಕ್ಷಣದಲ್ಲಿ ರದ್ದು ಮಾಡಿ ಎಸ್ಐಟಿ ಅಧಿಕಾರಿಗಳ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದರು.
|
5 |
+
ನಿನ್ನೆ ರೈಲಿನ ಮೂಲಕ ಜರ್ಮನಿಯಿಂದ ಲಂಡನ್ಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಎಸ್ಐಟಿ ಪ್ರಜ್ವಲ್ ಬ್ಯಾಂಕ್ ಖಾತೆಗಳ ಮೇಲೆ ತೀವ್ರ ನಿಗಾವಹಿಸಿದೆ.ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅವರು ಸ್ವದೇಶಕ್ಕೆ ಮರಳಿದ ತಕ್ಷಣವೇ ಅವರ ಬಂಧನವಾಗಲಿದೆ.
|
6 |
+
ನ್ಯಾಯಾಲಯದ ಬಂಧನದ ವಾರಂಟ್ ಆಧರಿಸಿ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಎಸ್ಐಟಿ ಮುಂದಾಗಿದೆ ಎಂದು ತಿಳಿದು ಬಂದಿದೆ.ಈ ಹಿಂದೆ ಪ್ರಜ್ವಲ್ ಅವರನ್ನು ಭಾರತಕ್ಕೆ ಕರೆತರಲು ನೆರವು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಕೇಂದ್ರಕ್ಕೆ ಪತ್ರ ಬರೆದಿದ್ದರು.
|
eesanje/url_46_140_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬೆಂಗಳೂರು-ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಐವರ ಸೆರೆ
|
2 |
+
ಬೆಂಗಳೂರು,ಮೇ19-ವಿದೇಶಗಳಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಐವರನ್ನು ಬಂಧಿಸಿರುವ ಕಸ್ಟಮ್ಸೌ ಅಧಿಕಾರಿಗಳು, 2.55 ಕೋಟಿ ಮೌಲ್ಯದ 3642.36 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
|
3 |
+
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವ್ಯಕ್ತಿಯನ್ನು ತಪಾಸಣೆಗೊಳಪಡಿಸಿದಾಗ ಆತನ ಬಳಿ 59.3 ಲಕ್ಷ ಮೌಲ್ಯದ 24 ಕ್ಯಾರೆಟ್ನ 828 ಗ್ರಾಂ ಚಿನ್ನ ಇರುವುದು ಕಂಡುಬಂದಿದೆ. ಕೂಡಲೇ ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
|
4 |
+
ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ತಪಾಸಣೆ ನಡೆಸಿದ ಕಸ್ಟಮ್ ಅಧಿಕಾರಿಗಳು, 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
|
5 |
+
ಖಚಿತ ಮಾಹಿತಿ ಮೇರೆಗೆ ದುಬೈನಿಂದ ಬಂದ ಮೂವರು ಪುರುಷರು ಹಾಗೂ ಓರ್ವ ಮಹಿಳೆಯ ತಪಾಸಣೆ ನಡೆಸಿದಾಗ ಜೀನ್ಸ್ ಪ್ಯಾಂಟ್ ಹಾಗೂ ಟೀಶರ್ಟ್ಗಳಲ್ಲಿ 2814.36 ಗ್ರಾಂನ ಪೇಸ್ಟ್ ರೀತಿಯ ಚಿನ್ನವನ್ನು ಅಡಗಿಸಿಟ್ಟುಕೊಂಡಿರುವುದು ಪತ್ತೆಯಾಗಿದೆ. ಈ ನಾಲ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
|
eesanje/url_46_140_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಮೇ.23 ರವರೆಗೂ ಮುಂದುವರೆಯಲಿದೆ ಮಳೆ
|
2 |
+
ಬೆಂಗಳೂರು, ಮೇ 19-ರಾಜಧಾನಿ ಸೇರಿದಂತೆ ಕಳೆದ ಒಂದು ವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮೇ.23 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
|
3 |
+
ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಾಗಡಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ, ಚಿತ್ರದುರ್ಗ, ಮೈಸೂರು ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ.ಬೆಂಗಳೂರಿನಲ್ಲಿ ನಿನ್ನೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ವಿವಿಧೆಡೆ ಮಳೆಯಾಗಿದೆ. ಇಂದು ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.
|
4 |
+
ಬಿಸಿಲ ಬೇಗೆಯಿಂದ ಬಳಲುತ್ತಿದ್ದ ರಾಜ್ಯದ ಜನತೆಗೆ ವರುಣನ ಆಗಮನದಿಂದ ತುಸು ತಂಪೆರೆದಿದ್ದು, ನಿಟ್ಟುಸಿರು ಬಿಡುವಂತಾಗಿದೆ. ತೀವ್ರ ಬರಗಾಲದಿಂದ ಅನ್ನದಾತರು ಕಂಗಾಲಾಗಿದ್ದು, ಬೆಳೆಗಳನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರು. ಈ ಮಧ್ಯೆ ಮಳೆಯ ಆಗಮನವಾಗಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ.
|
5 |
+
ನೀರಿನ ಅಭಾವ ಹಾಗೂ ಹೆಚ್ಚಿದ ಉಷ್ಣಾಂಶದಿಂದ ತರಕಾರಿಗಳ ಇಳುವರಿ ಕುಂಠಿತವಾಗಿ ಬೆಲೆ ಗಗನಕ್ಕೇರಿದ್ದು, ಇನ್ನೂ ಒಂದು ತಿಂಗಳು ಇದೇ ಬೆಲೆ ಮುಂದುವರೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಇದೇ ರೀತಿ ಮಳೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಬೆಳೆ ಬೆಲೆ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
|
eesanje/url_46_141_1.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗ ಮನವಿ
|
2 |
+
ಬೆಂಗಳೂರು,ಮೇ18-ರಾಜ್ಯದಲ್ಲಿ ಇತ್ತೀಚೆಗೆ ಕೊಲೆ, ಸುಲಿಗೆ, ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿದ್ದು, ತಕ್ಷಣವೇ ಉನ್ನತ ಅಧಿಕಾರಿಗಳ ಸಭೆ ಕರೆದು ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದೆ.
|
3 |
+
ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ನೇತೃತ್ವದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ, ಮುಖಂಡರಾದ ಎಸ್.ಹರೀಶ್, ಅಶ್ವತ್ಥನಾರಾಯಣ, ಮಾಳವಿಕ ಅವಿನಾಶ್ ಮತ್ತಿತರ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.
|
4 |
+
ಹುಬ್ಬಳ್ಳಿಯಲ್ಲಿ ಕೆಲ ದಿನಗಳ ಹಿಂದೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ, ಮಡಿಕೇರಿಯಲ್ಲಿ ವಿದ್ಯಾರ್ಥಿನಿಯ ಬರ್ಭರ ಕೊಲೆ, ಮೂರು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ಅಂಜಲಿ ಅಂಬಿಗೆರೆ ಹತ್ಯೆ ಸೇರಿದಂತೆ ಕಳೆದ ಎರಡು ತಿಂಗಳಿನಿಂದ ನಡೆದಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ಉಲ್ಲೇಖ ಮಾಡಲಾಗಿದೆ.
|
5 |
+
ಕರ್ನಾಟಕವು ಈ ಮೂಲಕ ಅಪರಾಧಗಳ ರಾಜ್ಯ ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ. ಆರ್ಥಿಕ ಅಪರಾಧಗಳಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ, ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣ ಶೇ.46ರಷ್ಟು ಹೆಚ್ಚಳ, ಹಿರಿಯ ನಾಗರೀಕರ ಮೇಲಿನ ಅಪರಾಧದಲ್ಲಿ ಶೇಕಡಾ 86ರಷ್ಟು ಹೆಚ್ಚಳ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಬಂದಿರುವುದು ಅತ್ಯಂತ ಬೇಸರದ ಮತ್ತು ಆತಂಕದ ವಿಚಾರ ಎಂದು ನಿಯೋಗ ಕಳವಳ ವ್ಯಕ್ತಪಡಿಸಿದೆ.
|
6 |
+
ಹಿಂದೆ ರಾಜ್ಯವು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ ಅಪರಾಧಗಳ ರಾಜ್ಯ ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ.
|
7 |
+
ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಳದ ವಿಚಾರದಲ್ಲೂ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ತಮ ಗಮನಕ್ಕೆ ತರಲು ಬಯಸುತ್ತೇವೆ.ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ಪ್ರಕರಣ ದಾಖಲಿಸದೆ ಇರುವುದು, ಜೀವ ಬೆದರಿಕೆ ಹಾಕಿದರೂ ಕ್ರಮ ಕೈಗೊಳ್ಳದ ಪರಿಸ್ಥಿತಿ ನಿರ್ಮಾಣವಾಗಿತ್ತು.
|
8 |
+
ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಕುಸಿದು ಅರಾಜಕತೆ ಸೃಷ್ಟಿಯಾಗಿದೆ. ಇದರಿಂದ ರಾಜ್ಯದಲ್ಲಿ ಪೊಲೀಸ್ ಇಲಾಖೆ ಇದೆಯೋ ಇಲ್ಲವೋ ಎಂಬ ಸಂದೇಹ ಬರುತ್ತಿದ್ದು, ಶ್ರೀಸಾಮಾನ್ಯರು ಇದೇ ಪ್ರಶ್ನೆಯನ್ನು ಮುಂದಿಡುತ್ತಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ.
|
9 |
+
ಗನ್ ಹಿಡಿದು ಓಡಾಡುವ ವ್ಯಕ್ತಿ ಮುಖ್ಯಮಂತ್ರಿಗಳಿಗೆ ಹೂಹಾರ ಹಾಕುವ ದುಃಸ್ಥಿತಿ ರಾಜ್ಯದ್ದು. ಜನರು ಆತಂಕದಿಂದ ಜೀವನ ನಡೆಸುತ್ತಿದ್ದಾರೆ. ಒಂದು ವರ್ಗಕ್ಕೆ ಬೆಣ್ಣೆ ಇನ್ನೊಂದು ವರ್ಗಕ್ಕೆ ಜೈಲುವಾಸ, ಲಾಠಿ ಏಟು ಎಂಬ ದುಸ್ಥಿತಿ ರಾಜ್ಯದ್ದಾಗಿದೆ ಎಂದು ವಿಷಾದಿಸಿದೆ.
|
10 |
+
ಕೋಮುದ್ವೇಷದ ಹಿಂಸಾಚಾರದ ಘಟನೆಗಳು, ರಾಜಕೀಯಪ್ರೇರಿತ ದ್ವೇಷಗಳಿಂದ ನಾಗರಿಕರು ಸುರಕ್ಷತೆ ಮತ್ತು ಭದ್ರತೆ ಇಲ್ಲದೆ ಒದ್ದಾಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಹಗೆತನ ಸಾಧಿಸುವುದು ಕಾಂಗ್ರೆಸ್ಗೆ ಸರ್ವೇಸಾಮಾನ್ಯವಾಗಿ ಬಿಟ್ಟಿದೆ ಎಂಬುದನ್ನೂ ತಮ ಅವಗಾಹನೆಗೆ ತರಲು ಬಯಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
|
eesanje/url_46_141_10.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಪ್ರಚಾರ ಪ್ರಭಾರಿಗಳ ನೇಮಕ
|
2 |
+
ಬೆಂಗಳೂರು,ಮೇ18-ವಿಧಾನಪರಿಷತ್ಗೆ ನಡೆಯುವ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೂ ಸಹ ಬಂಡಾಯದ ಬಿಸಿ ತಟ್ಟಿದೆ. ಆದ್ದರಿಂದ ಬಿಜೆಪಿ ಘಟಕ ಬಂಡಾಯ ಶಮನ, ಚುನಾವಣಾ ಪ್ರಚಾರಕ್ಕಾಗಿ ಪ್ರಭಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
|
3 |
+
ಈಶಾನ್ಯ ಪದವೀಧರ ಕ್ಷೇತ್ರದ ಡಾ. ಚಂದ್ರಶೇಖರ ಪಾಟೀಲ, ನೈಋತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ, ಬೆಂಗಳೂರು ಪದವೀಧರ ಕ್ಷೇತ್ರದ ಎ. ದೇವೇಗೌಡ ಜೂನ್ 21ರಂದು ನಿವೃತ್ತರಾಗಲಿದ್ದಾರೆ.
|
4 |
+
ಆಗ್ನೇಯ ಶಿಕ್ಷಕರ ಕ್ಷೇತ್ರದ ಡಾ. ವೈ. ಎ. ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದ ಎಸ್. ಎಲ್.ಭೋಜೇಗೌಡ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇ ಗೌಡ ಸಹ ನಿವೃತ್ತರಾಗಲಿದ್ದು, ಈ 6 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದೆ. ನಾಮಪತ್ರ ವಾಪಸ್ ಪಡೆಯಲು ಮೇ 20 ಕೊನೆಯ ದಿನವಾಗಿದೆ.
|
5 |
+
ಯಾವ ಕ್ಷೇತ್ರಕ್ಕೆ ಯಾರು ಪ್ರಭಾರಿಗಳು:ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಿಧಾನಪರಿಷತ್ ಮುಖ್ಯ ಸಚೇತಕರಾದ ಎನ್ .ರವಿಕುಮಾರ್ ಪ್ರಭಾರಿ. ಕ್ಷೇತ್ರ ವ್ಯಾಪ್ತಿಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಸೇರುತ್ತವೆ.
|
6 |
+
ನೈಋತ್ಯ ಪದವೀಧರ, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ಕುಮಾರ್ ಪ್ರಭಾರಿ, ರಾಜ್ಯ ಕಾರ್ಯದರ್ಶಿ ಡಿ.ಎಸ್.ಅರುಣ್ (ಸಹ ಪ್ರಭಾರಿ). ಕ್ಷೇತ್ರ ವ್ಯಾಪ್ತಿಗೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ (ಹೊನ್ನಾಳಿ, ಚನ್ನಗಿರಿ ವಿಧಾನಸಭಾ ಕ್ಷೇತ್ರ) ಸೇರುತ್ತವೆ.
|
7 |
+
ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥನಾರಾಯಣ ಪ್ರಭಾರಿಗಳು. ಕ್ಷೇತ್ರದ ವ್ಯಾಪ್ತಿಗೆ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಸೇರುತ್ತವೆ.
|
8 |
+
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಪ್ರಭಾರಿಗಳು. ಕ್ಷೇತ್ರದ ವ್ಯಾಪ್ತಿಗೆ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ದಾವಣಗೆರೆಯ (ಹರಿಹರ, ಜಗಳೂರು, ದಾವಣಗೆರೆ ವಿಧಾನಸಭಾ ಕ್ಷೇತ್ರಗಳು).ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷರಾದ ಎಂ. ರಾಜೇಂದ್ರ ಪ್ರಭಾರಿಗಳು. ಕ್ಷೇತ್ರದ ವ್ಯಾಪ್ತಿಗೆ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರುತ್ತವೆ.
|
9 |
+
ಕರ್ನಾಟಕ ವಿಧಾನ ಪರಿಷತ್ನ 3 ಪದವೀಧರ ಮತ್ತು 3 ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದೆ. ಜೂನ್ 3ರಂದು ಚುನಾವಣೆ ನಡೆಯಲಿದ್ದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಜೆಡಿಎಸ��� ಜೊತೆ ಮೈತ್ರಿ ಮಾಡಿಕೊಂಡು ಪಕ್ಷ ಚುನಾವಣೆ ಎದುರಿಸುತ್ತಿದೆ.
|
eesanje/url_46_141_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನು ಯೋಗ್ಯರಿಗೆ ನೀಡಿ : ಸಿಎಂಗೆ ವಿಜಯೇಂದ್ರ ಮನವಿ
|
2 |
+
ಬೆಂಗಳೂರು,ಮೇ18-ಗೊಂದಲದ ಗೂಡಾಗಿ ಪರಿಣಮಿಸಿರುವ ಪ್ರಾಥಮಿಕ ಶಿಕ್ಷಣ ಇಲಾಖೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಹಾಗೂ ಇದಕ್ಕೆ ಅರ್ಹತೆ ಇರುವ ಯೋಗ್ಯರನ್ನು ನೇಮಕ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಮಾಡಿದ್ದಾರೆ.
|
3 |
+
ಈ ಸಂಬಂಧ ತಮ್ಮ ಅಧಿಕೃತ ಜಾಲತಾಣ ಖಾತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭವಿಷ್ಯತ್ತಿನಲ್ಲಿ ನಾಡು, ದೇಶ ಕಟ್ಟುವ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಲ್ಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿದಾರಿಗೆ ತರುವ ಕಟ್ಟುನಿಟ್ಟಿನ ಕ್ರಮ ವಹಿಸಲಿ. ಶಿಕ್ಷಣ ಬದ್ಧತೆ ಇದ್ದವರ ಕೈಗೆ ಇಲಾಖೆಯ ಸಾರಥ್ಯ ವಹಿಸಿಕೊಡಲಿ ಎಂದು ಸಲಹೆ ಮಾಡಿದ್ದಾರೆ.
|
4 |
+
ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ. ನಾಳಿನ ಪ್ರಜೆಗಳ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
|
5 |
+
ಕಾಂಗ್ರೆಸ್ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರವೃತ್ತಿ ಮೇಳೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ಅರಾಜಕತೆಯತ್ತ ಸಾಗಿದೆ, ಇದನ್ನು ಮುಖ್ಯಮಂತ್ರಿಗಳು ಇಂದು ಒಪ್ಪಿಕೊಂಡು ಕೃಪಾಂಕ ನೀಡುವಷ್ಟು ತಳಮಟ್ಟಕ್ಕೆ ಕುಸಿದಿರುವ ಎಸ್ಎಸ್ಎಲ್ಸಿ ಪರೀಕ್ಷೆಯ ಬಗ್ಗೆ ಅಸಹಾಯಕತೆಯಿಂದ ಕೋಪೋದ್ರಿಕ್ತರಾಗಿದ್ದಾರೆ.
|
6 |
+
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ ತಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋದನವಾಗಿದೆ ಎಂದು ಬೇಸರಿಸಿದ್ದಾರೆ.
|
7 |
+
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಿಗೆ ಸರಿಸುವ ವಿದ್ವತ್ತು ಪ್ರದರ್ಶಿಸಲು ಹೋಗಿ ನೈಜ ಶಿಕ್ಷಣ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ಸರ್ಕಾರ, ಚಾಲನೆಯ ಅನುಭವವಿಲ್ಲದ ಚಾಲಕನೊಬ್ಬ ವಾಹನ ಅಥವಾ ರೈಲು ಮುನ್ನಡೆಸಿದರೆ ಯಾವ ಸ್ಥಿತಿ ಉಂಟಾಗಬಹುದು ಅಂಥದ್ದೇ ಸ್ಥಿತಿ ಇಂದು ರಾಜ್ಯದ ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆಗೆ ಬಂದೊದಗಿದೆ ಎಂದಿದ್ದಾರೆ.
|
8 |
+
ಮುಖ್ಯಮಂತ್ರಿಗಳು ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಇಂದು ಅವರೇ ಪಶ್ಚಾತ್ತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ ಎಂದಿರುವ ಅವರು, ಮೇಟಿ ವಿದ್ಯೆಗೆ ರೈತ, ಅಕ್ಷರ ವಿದ್ಯೆಗೆ ವಿನಯವಂತನಿದ್ದರೆ ಕೃಷಿ-ಶಿಕ್ಷಣ ಎರಡೂ ಸಮೃದ್ಧವಾಗುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
|
eesanje/url_46_141_12.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮದ್ಯಪ್ರಿಯರಿಗೆ ಮತ್ತೆ ಶಾಕ್ ನೀಡಲು ಮುಂದಾದ ಗ್ಯಾರಂಟಿ ಸರ್ಕಾರ..!?
|
2 |
+
ಬೆಂಗಳೂರು,ಮೇ18-ಕರ್ನಾಟಕದಲ್ಲಿ ಮತ್ತೆ ಮದ್ಯದ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಮದ್ಯಪ್ರಿಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳುವ ಲಕ್ಷಣಗಳು ಗೋಚರಿಸಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ರಾಜ್ಯ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಮತ್ತೊಮೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಇದರ ಪರಿಣಾಮವಾಗಿ ಪ್ರತಿ 650 ಮಿಲಿ ಬಾಟಲಿಗೆ 8-10 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ.
|
3 |
+
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಸ್ಪ್ಯಾಬ್ಗಳ ಅಗ್ಗದ ಮದ್ಯಗಳ ಬೆಲೆ ತುಂಬಾ ಕಡಿಮೆಯಿದೆ. ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ವಿದೇಶಿ ಮದ್ಯಕ್ಕೆ ಹೋಲಿಸಿದರೆ ಅಗ್ಗದ ಬೆಲೆಯ ಮದ್ಯಗಳ ಮಾರಾಟ ಹೆಚ್ಚಿದೆ. ಹೀಗಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ.
|
4 |
+
ಕಾಂಗ್ರೆಸ್ ತನ್ನ ಐದು ಭರವಸೆಗಳನ್ನು ಈಡೇರಿಸಲು ಈ ಬೆಲೆ ಹೆಚ್ಚಳ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿವೆ. ಕರಡು ಅಧಿಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ತಯಾರಿಸಲಾದ ಅಥವಾ ರಾಜ್ಯಕ್ಕೆ ಆಮದು ಮಾಡಿಕೊಳ್ಳುವ ಬಾಟಲಿಯ ಬಿಯರ್ನ ಮೇಲೆ ಎಇಡಿಯನ್ನು ಶೇಕಡಾ 185ರಿಂದ ಶೇಕಡಾ 195ಕ್ಕೆ ಶೇ.10ರಷ್ಟು ಹೆಚ್ಚಿಸಲಾಗುವುದು. ಆರು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ಮದ್ಯದ ಬೆಲೆಯಲ್ಲಿ ಏರಿಕೆಯಾಗಲಿದೆ.
|
5 |
+
ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾರತೀಯ ತಯಾರಿಕಾ ಮದ್ಯದ ಮೇಲೆ ಶೇ.20ರಷ್ಟು ಮತ್ತು ಬಿಯರ್ ಮೇಲೆ ಶೇ.175ರಿಂದ ಶೇ.185ಕ್ಕೆ ಎಇಡಿ ಹೆಚ್ಚಿಸಿದ್ದರು. ರಾಜ್ಯ ಸರಕಾರಕ್ಕೆ ಅಬಕಾರಿ ಆದಾಯವೇ ನಿರ್ಣಾಯಕ. 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಅಬಕಾರಿಯಿಂದ 36,000 ಕೋಟಿ ರೂ.ಆದಾಯ ಗಳಿಸುವ ಗುರಿ ಹೊಂದಿದೆ. ಹೊರ ರಾಜ್ಯಗಳಲ್ಲಿ ದುಬಾರಿ ಬೆಲೆಯ ಮದ್ಯಗಳ ಬೆಲೆ ಕರ್ನಾಟಕಕ್ಕಿಂತಲೂ ಕಡಿಮೆ ಇದೆ. ಈ ಮದ್ಯಗಳ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಇವುಗಳ ಬೆಲೆಯನ್ನು ಇಳಿಕೆ ಮಾಡಲಿದೆ.
|
6 |
+
ಆರರಿಂದ 12ನೇ ಸ್ಪ್ಯಾಬ್ವರೆಗಿನ ಸೆಮಿ ಪ್ರೀಮಿಯಂ ಮದ್ಯಗಳ ಬೆಲೆಯಲ್ಲಿ ಶೇ.10ರಷ್ಟು, 12ರಿಂದ 18ನೇ ಸ್ಪ್ಯಾಬ್ವರೆಗಿನ ವಿದೇಶಿ ಅಥವಾ ಪ್ರೀಮಿಯಂ ಬ್ರಾಂಡ್ಗಳ ಮದ್ಯದ ಬೆಲೆಯಲ್ಲಿ ಶೇ.12ರಿಂದ 15ರಷ್ಟು ಇಳಿಕೆ ಮಾಡುವ ಸಾಧ್ಯತೆಯಿದೆ. ಹೊರ ರಾಜ್ಯಗಳಲ್ಲಿನ ಮದ್ಯದ ದರಪಟ್ಟಿ ಆಧರಿಸಿ ಹೊಸದಾಗಿ ಬೆಲೆ ನಿಗದಿ ಮಾಡಲಾಗುತ್ತದೆ.
|
7 |
+
2023ರ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರ ಮೂರು ಬಾರಿ ಬಿಯರ್ ದರ ಹೆಚ್ಚಳ ಮಾಡಿದೆ. ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಬಿಯರ್ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಬಿಯರ್ ಉತ್ಪಾದಕ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್ ಮೇಲೆ ಕನಿಷ್ಠ 10 ರೂ.ವರೆಗೆ ದರ ಹೆಚ್ಚಿಸಿದ್ದವು.
|
8 |
+
ಅದರ ಬೆನ್ನಲ್ಲೇ ಸರಕಾರ ಫೆ.1ರಿಂದ ಜಾರಿಗೆ ಬರುವಂತೆ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಶೇ.185ರಿಂದ 195ಕ್ಕೆ ಹೆಚ್ಚಳ ಮಾಡಿತ್ತು. ಇದರೊಂದಿಗೆ ಎಇಡಿ ಶೇ.10ರಷ್ಟು ಹೆಚ್ಚಳವಾಗಿತ್ತು.
|
9 |
+
ಎಇಡಿ ಏರಿಕೆಯಿಂದಾಗಿ ಪ್ರತಿ ಬಾಟಲಿ ಬಿಯರ್ ದರವು ಬ್ರ್ಯಾಂಡ್ಗಳ ಆಧಾರದಲ್ಲಿ ಕನಿಷ್ಠ 8 ರೂ.ಗಳಿಂದ ಗರಿಷ್ಠ 15 ರೂ.ವರೆಗೆ ಹೆಚ್ಚಳವಾಗಿತ್ತು. ಸಾಮಾನ್ಯ ಬ್ರ್ಯಾಂಡ್ಗಳಿಂದ ಪ್ರೀಮಿಯಂ ಬ್ರ್ಯಾಂಡ್ಗಳವರೆಗೆ ಎಲ್ಲಾ ಬಗೆಯ ಬಿಯರ್ ದರ ಏರಿಕೆಯಾಗಿತ್ತು. ಇದರೊಂದಿಗೆ ಕಳೆದ ಏಳೆಂಟು ತಿಂಗಳ ಅವಧಿಯಲ್ಲಿ ಬಿಯರ್ ಬೆಲೆ ಪ್ರತಿ ಬಾಟಲ್ಗೆ ಸುಮಾರು 40 ರೂ.ವರೆಗೆ ಹೆಚ್ಚಳವಾಗಿದೆ.
|
10 |
+
ರಾಜ್ಯದಲ್ಲಿ ಮದ್ಯದ ಬ್ರ್ಯಾಂಡ್ಗಳನ್ನು ಬೆಲೆಯ ಅನುಸಾರ 18 ಸ್ಪ್ಯಾಬ್ಗಳಾಗಿ ವಿಂಗಡಿಸಲಾಗಿದೆ. ಒಂದರಿಂದ ಐದನೇ ಸ್ಪ್ಯಾಬ್ವರೆಗಿನ ಮದ್ಯಗಳ ಮಾರಾಟದಿಂದ ಶೇ.75ರಷ್ಟು ಆದಾಯ ಬರುತ್ತದೆ. 6ರಿಂದ 12ನೇ ಸ್ಪ್ಯಾಬ್ವರೆಗಿನ ಸೆಮಿ ಪ್ರೀಮಿಯಂ ಮದ್ಯಗಳಿಂದ ಶೇ.20ರಷ್ಟು ಮತ್ತು 1ರಿಂದ 18ರವರೆಗಿನ ಸ್ಪ್ಯಾಬ್ಗಳ ಪ್ರೀಮಿಯಂ ವಿದೇಶಿ ಮದ್ಯಗಳಿಂದ ಶೇ.5ರಷ್ಟು ಆದಾಯ ಬರುತ್ತದೆ. ಆದಾಯದ ಲೆಕ್ಕಾಚಾರದಲ್ಲೇ ಸರಕಾರ 2ರಿಂದ 5ನೇ ಸ್ಪ್ಯಾಬ್ವರೆಗಿನ ಮದ್ಯಗಳ ಬೆಲೆಯನ್ನು ಶೇ.7ರಿಂದ 8ರಷ್ಟು ಹೆಚ್ಚಳ ಮಾಡಲಿದೆ.
|
11 |
+
ಚುನಾವಣೆ ಬಳಿಕ ಏರಿಕೆ:ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ಆ ನಂತರ ಬೆಲೆ ಪರಿಷ್ಕರಣೆ ಮಾಡಿಲ್ಲ. ನೆರೆಯ ರಾಜ್ಯಗಳ ಮದ್ಯದ ಬೆಲೆಗೆ ಅನುಗುಣವಾಗಿ ಕರ್ನಾಟಕದಲ್ಲೂ ದೇಶೀಯ ಮದ್ಯದ ಬೆಲೆ ಪರಿಷ್ಕರಿಸುವುದಾಗಿ ಸರಕಾರ ಬಜೆಟ್ನಲ್ಲೇ ಘೋಷಿಸಿತ್ತು. ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದರ ಹೆಚ್ಚಳ ಮಾಡಿರಲಿಲ್ಲ. ಚುನಾವಣೆ ಅಂತ್ಯಗೊಂಡ ಬಳಿಕ ದೇಶೀಯ ಮದ್ಯಗಳ ಬೆಲೆ ಏರಿಕೆಯಾಗಲಿದೆ ಎಂದು ಅಬಕಾರಿ ಇಲಾಖೆಯ ಮೂಲಗಳು ತಿಳಿಸಿವೆ.
|
12 |
+
ಈಗಿನ ದರ – ಹೆಚ್ಳಳ ಸಾಧ್ಯತೆಮೊದಲನೇ ಸ್ಪ್ಯಾಬ್63.14 ರೂ. -ಹೆಚ್ಚಳ ಸಾಧ್ಯತೆಯಿಲ್ಲಎರಡನೇ ಸ್ಪ್ಯಾಬ್80ರೂ.ನ ಬ್ರಾಂಡ್ -ತಲಾ 5 ರೂ. ಹೆಚ್ಚಳಮೂರನೇ ಸ್ಪ್ಯಾಬ್99.50 ರೂ. – 105 ರೂ.ನಾಲ್ಕನೇ ಸ್ಪ್ಯಾಬ್122.50 ರೂ – 130 ರೂ.
|
eesanje/url_46_141_2.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪೆನ್ಡ್ರೈವ್ ಪ್ರಕರಣಕ್ಕೂ ಕಾಂಗ್ರೆಸ್ ನಾಯಕರಿಗೂ ಯಾವುದೇ ಸಂಬಂಧವಿಲ್ಲ : ಸಚಿವ ಚೆಲುವರಾಯಸ್ವಾಮಿ
|
2 |
+
ಬೆಂಗಳೂರು,ಮೇ 18-ಪೆನ್ಡ್ರೈವ್ ಪ್ರಕರಣಕ್ಕೂ ಕಾಂಗ್ರೆಸ್ನ ಯಾವ ನಾಯಕರಿಗೂ ಸಂಬಂಧವಿಲ್ಲ, ಇದರಿಂದ ನಮ್ಮ ಪಕ್ಷಕ್ಕೆ ರಾಜಕೀಯವಾಗಿ ಲಾಭವಾಗಿಲ್ಲ, ಪ್ರಜ್ವಲ್ ರೇವಣ್ಣನನ್ನು ಅವರ ಕುಟುಂಬದ ಸದಸ್ಯರು ಕರೆಸಿ ತನಿಖೆಗೆ ಒಳಪಡಿಸಬೇಕು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಸಲಹೆ ನೀಡಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್ಡ್ರೈವ್ ಪ್ರಕರಣದ ಬಗ್ಗೆ ನಮಗೂ ನೋವಾಗಿದೆ. ಇದು ಆಗಬಾರದಿತ್ತು. ದೇವೇಗೌಡರ ಕುಟುಂಬಕ್ಕೆ ಈ ರೀತಿಯಾಗಿರುವುದರ ಬಗ್ಗೆ ಬೇಸರವಿದೆ. ರಾಜ್ಯದಲ್ಲಿ ಅತ್ಯಂತ ಪ್ರತಿಷ್ಠಿತ ಕುಟುಂಬ ಅದು. ದೇವೇಗೌಡರನ್ನು ಹೊರತುಪಡಿಸಿದರೆ, ಕುಮಾರಸ್ವಾಮಿಯವರು ಆ ಮನೆಯ ಎರಡನೇಯ ಮುಖ್ಯಸ್ಥರಾಗಿದ್ದಾರೆ. ಈಗಲಾದರೂ ಅವರು ಪ್ರಜ್ವಲ್ನನ್ನು ವಾಪಸ್ ಕರೆಸಲಿ ಎಂದು ಮನವಿ ಮಾಡಿದರು.
|
4 |
+
ಬಿಇಜೆಪಿ ಮುಖಂಡ ದೇವರಾಜೇಗೌಡ ಒಬ್ಬ ಮಹಿಳೆಯ ಜೊತೆ ಮಾತನಾಡಿರುವ ವಿಡಿಯೋ ಮತ್ತು ಆಡಿಯೋವನ್ನು ಎಲ್ಲರೂ ನೋಡಿದ್ದಾರೆ. ಅಂತಹ ವ್ಯಕ್ತಿ ನಮ ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ. ಆತನ ಹೇಳಿಕೆಗೆ ನಾವು ಪ್ರತಿಕ್ರಿಯಿಸುವ ಅಗತ್ಯವೂ ಇಲ್ಲ ಎಂದರು.
|
5 |
+
ದೇವರಾಜೇಗೌಡ ಒಂದು ವರ್ಷದಿಂದಲೇ ರೇವಣ್ಣ ಕುಟುಂಬದ ವಿರುದ್ಧ ಹೋರಾಟ ನಡೆಸುತ್ತಿದ್ದರು. ತಮ್ಮ ಬಳಿ ಪೆನ್ಡ್ರೈವ್ ಇದೆ ಎಂದು ಹೇಳಿಕೊಂಡಿದ್ದರು. ಅದನ್ನು ತನಿಖಾ ಸಂಸ್ಥೆ ಅಥವಾ ನ್ಯಾಯಾಲಯಕ್ಕೆ ಒಪ್ಪಿಸದೆ ವೈಯಕ್ತಿಕವಾಗಿ ಇಟ್ಟುಕೊಂಡಿದ್ದೇಕೆ? ಇಲ್ಲಿ ಮೂಲ ಪ್ರಶ್ನೆ ಇರುವುದು ಒಂದು ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ದುರುಪಯೋಗಪಡಿಸಿಕೊಂಡಿರುವುದು, ಎರಡನೇಯದು ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿರುವುದು, ಮೂರನೆಯದು ಅದು ಎಲ್ಲಿಂದ, ಯಾರ ಮೂಲಕ ಬಹಿರಂಗವಾಯಿತು? ಎಂಬುದು. ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕೇ ಹೊರತು ಇದರ ನಡುವೆ ನೂರು ಕೋಟಿ ರೂ. ಡೀಲು, ಸರ್ಕಾರ ಪತನ… ಈ ಅನಗತ್ಯ ಚರ್ಚೆಗಳು ಏಕೆ? ಎಂದು ಪ್ರಶ್ನಿಸಿದರು.
|
6 |
+
ಇದರಲ್ಲಿ ಡಿ.ಕೆ.ಶಿವಕುಮಾರ್, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ ಅಥವಾ ನನ್ನ ಪಾತ್ರವೇನು? ನಮಗೆ ಇದರಿಂದ ರಾಜಕೀಯ ಲಾಭ ಮಾಡಿಕೊಳ್ಳುವ ಉದ್ದೇಶ ಇದ್ದಿದ್ದರೆ ಚುನಾವಣೆಗೂ ಮೊದಲೇ ಬಹಿರಂಗಪಡಿಸಬಹುದಿತ್ತು. ಆದರೆ ಅದು ನಮಗೆ ಅನಗತ್ಯ. ಇದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರವಲ್ಲ. ಕಂಡೂ ಕಾಣದಂತೆ ಇರಬಹುದಾದಂತಹ ಸಂಗತಿ. ನಮಂಥವರೇ ಅಲ್ಲ, ಜನಸಾಮಾನ್ಯರೂ ಕೂಡ ವಿಡಿಯೋ ಬಹಿರಂಗಪಡಿಸುವಂತಹ ಕೆಳಹಂತಕ್ಕೆ ಇಳಿಯುವುದಿಲ್ಲ ಎಂದರು.
|
7 |
+
ಪೆನ್ಡ್ರೈವ್ ಯಾರ ಬಳಿ ಇತ್ತು? ಯಾರು ಹೊರತಂದರು? ಎಂಬುದು ತನಿಖೆಯಾಗಿ ಸತ್ಯ ಹೊರಬರಬೇಕು. ದೇವರಾಜೇಗೌಡ, ಕಾರ್ತಿಕ್, ಪ್ರಜ್ವಲ್ ರೇವಣ್ಣ ಪ್ರಕರಣದ ಕೇಂದ್ರ ಸ್ಥಾನದಲ್ಲಿದ್ದಾರೆ. ಅದನ್ನು ಹೊರತುಪಡಿಸಿ ಡಿ.ಕೆ.ಶಿವಕುಮಾರ�� ಸೇರಿದಂತೆ ನಮ ವಿಚಾರಗಳು ಏಕೆ ಚರ್ಚೆಯಾಗುತ್ತಿವೆ? ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
|
8 |
+
ರೇವಣ್ಣ ಅವರ ಬಗ್ಗೆ ಎಲ್ಲರಿಗೂ ಗೌರವವಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಅವರ ಬಂಧನವಾಗಿದೆ. ಇಲ್ಲದೇ ಇದ್ದಿದ್ದರೆ ರೇವಣ್ಣ ಅವರಿಗೆ ಕಾನೂನಿನ ತೊಡಕಾಗುತ್ತಿರಲಿಲ್ಲ. ಈಗಲೂ ಕುಮಾರಸ್ವಾಮಿಯವರು ಪ್ರಕರಣದ ಬಗ್ಗೆ ಪದೇಪದೇ ಕೆಣಕಿ ಮಾತನಾಡುವುದನ್ನು ನಿಲ್ಲಿಸಿದರೆ ತನಿಖೆಯ ಪಾಡಿಗೆ ತನಿಖೆ ನಡೆಯುತ್ತದೆ. ಡಿ.ಕೆ.ಶಿವಕುಮಾರ್ರವರು ಹೇಳಿಕೆ ನೀಡುವಾಗ ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು.
|
9 |
+
ನಮಗೆ ಪೆನ್ಡ್ರೈವ್ ವಿಚಾರಕ್ಕಿಂತಲೂ ಮಹತ್ವದ ಬೇರೆ ವಿಚಾರಗಳಿವೆ. ಮಳೆಯಾಗಿದೆ, ಕೃಷಿ ಚಟುವಟಿಕೆ ಬಗ್ಗೆ ಗಮನ ಹರಿಸುತ್ತಿದ್ದೇವೆ. ದೇವರಾಜೇಗೌಡ ಆರೋಪ ಮಾಡಿದಂತೆ ನಾವು ನಾಲ್ಕು ಜನ ಸಚಿವರು ಸಭೆ ನಡೆಸಿ, ಷಡ್ಯಂತ್ರ ಮಾಡಿರುವುದನ್ನು ಸಾಬೀತುಪಡಿಸಿದರೆ ಬಹಿರಂಗ ಕ್ಷಮೆ ಕೇಳಲು ನಾನು ಸಿದ್ಧ ಎಂದು ಸವಾಲು ಹಾಕಿದರು.
|
10 |
+
ಬಿಜೆಪಿ ಮುಖಂಡ ಎಲ್.ಆರ್.ಶಿವರಾಮೇಗೌಡರ ಜೊತೆ ನನಗೆ ವೈಯಕ್ತಿಕ ಸ್ನೇಹವಿದೆ. ಆದರೆ ರಾಜಕೀಯವಾಗಿ ಇಬ್ಬರೂ ಬೇರೆ ಪಕ್ಷದಲ್ಲಿದ್ದೇವೆ. ಪೆನ್ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ನಾನು ಯಾರ ಬಳಿಯೂ ವಿಚಾರ ವಿನಿಮಯ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
|
11 |
+
ಜನತಾದಳದವರು ಯಾವ ಕಾರಣಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದೇ ಅರ್ಥವಾಗುವುದಿಲ್ಲ. ಆ ಪಕ್ಷದ ಬಹಳಷ್ಟು ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಆಸಕ್ತಿ ಇಲ್ಲ. ಆದರೂ ನಾಯಕರ ಒತ್ತಡಕ್ಕೆ ಮಣಿದು ಹೋಗುತ್ತಿದ್ದಾರೆ ಎಂದು ಹೇಳಿದರು. ಜೆಡಿಎಸ್ ಮತ್ತು ಬಿಜೆಪಿಯಿಂದ ಕಾಂಗ್ರೆಸ್ಗೆ ಸೇರಲು ಹಲವು ಶಾಸಕರು, ಮಾಜಿ ಶಾಸಕರು, ಲೋಕಸಭಾ ಚುನಾವಣೆಗೂ ಮುನ್ನ ಚರ್ಚೆ ನಡೆಸಿದ್ದರು. ಫಲಿತಾಂಶದ ಬಳಿಕ ಯಾವ ರೀತಿ ಬೆಳವಣಿಗೆಗಳಾಗುತ್ತವೆ ಎಂಬುದು ಗೊತ್ತಿಲ್ಲ. ಬಹಳಷ್ಟು ಮಂದಿ ಬರಬಹುದು ಎಂದ ಅವರು, ರಾಜ್ಯದಲ್ಲಿ ಚುನಾಯಿತ ಸರ್ಕಾರವನ್ನು ಪತನಗೊಳಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಮಾತ್ರವಲ್ಲ. ಅಪರಾಧ ಕೂಡ ಎಂದು ಹೇಳಿದರು.
|
12 |
+
ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚೆಲುವರಾಯಸ್ವಾಮಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದಿಗೂ ತಮ ಸ್ನೇಹಿತರು. ಅವರು ನನ್ನನ್ನು ವೈರಿ ಎಂದು ತಿಳಿದುಕೊಳ್ಳಬಹುದು. ನಾನು ಅವರನ್ನು ಹಾಗೆ ಭಾವಿಸುವುದಿಲ್ಲ ಎಂದರು.
|
eesanje/url_46_141_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ಬ್ಯಾಂಕ್ ಖಾತೆಗಳ ಮೇಲೆ ಎಸ್ಐಟಿ ನಿಗಾ
|
2 |
+
ಬೆಂಗಳೂರು, ಮೇ 18-ಪೆನ್ಡ್ರೈವ್ ಪ್ರಕರಣ ಸದ್ದು ಮಾಡುತ್ತಿದ್ದಂತೆಯೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ಎಸ್ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ.
|
3 |
+
ಪ್ರಜ್ವಲ್ಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಎಸ್ಐಟಿ ಪಡೆದುಕೊಂಡಿದ್ದು, ಅವರ ಅಕೌಂಟ್ಗಳನ್ನು ಫ್ರೀಜ್ ಮಾಡಲು ಮುಂದಾಗಿದ್ದಾರೆ ಎಂದು ಗೊತ್ತಾಗಿದೆ.
|
4 |
+
ಪ್ರಜ್ವಲ್ ಖಾತೆಗೆ ಹಣ ಸಂದಾಯವಾಗಿರುವ ಬಗ್ಗೆ ಈಗಾಗಲೇ ಎಸ್ಐಟಿ ಮಾಹಿತಿಗಳನ್ನು ಕಲೆ ಹಾಕಿದ್ದು, ಒಟ್ಟು 7 ಬ್ಯಾಂಕ್ ಖಾತೆಗಳನ್ನು ಪ್ರಜ್ವಲ್ ಹೊಂದಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಎಸ್ಐಟಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ.
|
5 |
+
ಪೆನ್ಡ್ರೈವ್ ವಿಚಾರ ಹೊರಬೀಳುತ್ತಿದ್ದಂತೆ ಪ್ರಜ್ವಲ್ ತಲೆಮರೆಸಿಕೊಂಡು 21 ದಿನಗಳಾದರೂ ಆತ ವಿಚಾರಣೆಗೆ ಬಾರದ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಆತನ ಆರ್ಥಿಕ ವಹಿವಾಟನ್ನು ಬಿಗಿಗೊಳಿಸಲು ಮುಂದಾಗಿದ್ದಾರೆ.
|
6 |
+
ಪ್ರಜ್ವಲ್ ಖಾತೆಗೆ ಹಣ ಹಾಕಿದವರ ಬಗ್ಗೆಯೂ ಎಸ್ಐಟಿ ಮಾಹಿತಿ ಕಲೆ ಹಾಕಿದ್ದು, ಏಳು ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಈ ಖಾತೆಗಳಿಗೆ ಎಲ್ಲಿಂದ, ಎಷ್ಟೆಷ್ಟು ಹಣ, ಯಾರು ಜಮಾ ಮಾಡಿದ್ದಾರೆ ಎಂಬ ಬಗ್ಗೆ ವಿವರಗಳನ್ನು ಸಂಗ್ರಹಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
|
eesanje/url_46_141_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕೊಲೆಯಾದ ಅಂಜಲಿ ಮನೆಗೆ ಸಚಿವ ಸಂತೋಷ್ ಲಾಡ್ ಭೇಟಿ
|
2 |
+
ಹುಬ್ಬಳ್ಳಿ, ಮೇ 18-ಇತ್ತೀಚೆಗೆ ಕೊಲೆಯಾದ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಅಂಜಲಿ ಅವರ ಅಜ್ಜಿ ಗಂಗಮ ಮತ್ತು ಸಹೋದರಿಯರಿಗೆ ಧೈರ್ಯ ಹೇಳಿದ ಲಾಡ್, ಸಂತೋಷ್ ಲಾಡ್ ಫೌಂಡೇಷನ್ನಿಂದ 2 ಲಕ್ಷ ರೂ.ಗಳ ಚೆಕ್ ನೀಡಿದರು.
|
3 |
+
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಬೇಕು ಹಾಗೂ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಮನವಿ ಮಾಡಿದರು. ಸಮಾಜದಲ್ಲಿ ಹಾಗೂ ವಿಶೇಷವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿರುವುದು ಒಳ್ಳೆಯದಲ್ಲ. ಅಪರಾಧ ಕೃತ್ಯಗಳಲ್ಲಿ ತೊಡಗುವ ಯುವಕರ ಮನಃಸ್ಥಿತಿ ಎಂತಹದ್ದು ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
4 |
+
ಗೃಹ ಸಚಿವರು ಸದ್ಯದಲ್ಲೇ ನಗರಕ್ಕೆ ಭೇಟಿ ನೀಡಲಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ನಿರ್ಲಕ್ಷ್ಯ ವಹಿಸಿದ ಪೊಲೀಸರನ್ನು ಅಮಾನತು ಸಹ ಮಾಡಲಾಗಿದೆ. ವಿಪಕ್ಷದಲ್ಲಿರುವ ಬಿಜೆಪಿ ನಾಯಕರು ಅವರ ಕೆಲಸ ಮಾಡುತ್ತಿದ್ದಾರೆ. ಸರ್ಕಾರವನ್ನು ವಿರೋಧಿಸುವುದು ಅವರ ಕೆಲಸ ಎಂದರು.
|
5 |
+
ಡ್ರಗ್್ಸ ಮಾರಾಟ ರಾಜ್ಯ ಅಷ್ಟೇ ಅಲ್ಲ, ದೇಶದಾದ್ಯಂತ ನಡೆಯುತ್ತಿದೆ. ಇಂತಹ ಪ್ರಕರಣದಲ್ಲಿ ಭಾಗಿಯಾಗುವವರ ಬಗ್ಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮಕೈಗೊಳ್ಳುತ್ತೇವೆ. ಶ್ರೀ ರಾಮ ಸೇನೆ ಮಹಿಳೆಯರ ಆತ ರಕ್ಷಣೆ ಮಾಡುತ್ತಿರುವುದು ಒಳ್ಳೆಯದು. ಆದರೆ ಇದು ತ್ರಿಶೂಲ ದೀಕ್ಷೆ ನೀಡುವ ಹಾಗೂ ಪಡೆಯುವವರಿಗೆ ಬಿಟ್ಟ ವಿಚಾರ. ಇದಕ್ಕೆ ನಾನು ಉತ್ತರಿಸಲ್ಲ. ಕಾನೂನು ಪ್ರಕಾರ ನೀಡಲಾಗದಿದ್ದರೆ ಖಂಡಿತವಾಗಿ ನಿಲ್ಲಿಸುತ್ತೇವೆ ಎಂದರು.
|
6 |
+
ಅಂಜಲಿ ಕುಟುಂಬ ಬಡತನದಲ್ಲಿದೆ. ಅವರಿಗೆ ಸರ್ಕಾರದ ಪರಿಹಾರ ನೀಡುತ್ತದೆ. ಏನು ಪರಿಹಾರ ಕೊಡಲಿದೆ ಎಂಬುವುದನ್ನು ನಾನು ಹೇಳುವುದಿಲ್ಲ ಎಂದರು.ಲಾಡ್ ಭೇಟಿಗೆ ವಿರೋಧ: ಅಂಜಲಿ ಮನೆಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ ಅವರನ್ನು ಬಿಜೆಪಿ ಮುಖಂಡ ಅನೂಪ್ ಬಿಜವಾಡ ಸೇರಿದಂತೆ ಸ್ಥಳೀಯರು ಇಷ್ಟು ದಿನ ಎಲ್ಲಿ ಹೋಗಿದ್ದಿರಿ, ಈಗ ಯಾಕೆ ಬಂದಿರಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.
|
eesanje/url_46_141_5.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಜರ್ಮನಿಯಿಂದ ಲಂಡನ್ಗೆ ಹಾರಿದ ಪ್ರಜ್ವಲ್..!?
|
2 |
+
ಬೆಂಗಳೂರು, ಮೇ 18-ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಲಂಡನ್ಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯ ಮೊದಲನೇ ಹಂತದ ಮತದಾನ ಮುಗಿದ ಬಳಿಕ ಪ್ರಜ್ವಲ್ ಜರ್ಮನಿಗೆ ಹೋಗಿದ್ದು, ಇಲ್ಲಿಯ ವರೆಗೂ ಅಲ್ಲೇ ಇದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಲಂಡನ್ಗೆ ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
|
3 |
+
ಇಂಗ್ಲೆಂಡ್ನಲ್ಲಿರುವ ಭಾರತದ ಉದ್ಯಮಿಯೊಬ್ಬರ ಸಹಾಯದಿಂದ ಪ್ರಜ್ವಲ್ ತನ್ನ ಇಬ್ಬರು ಗೆಳೆಯರೊಂದಿಗೆ ರೈಲು ಮೂಲಕ ಜರ್ಮನಿಯ ಮ್ಯೂನಿಚ್ನಿಂದ ಲಂಡನ್ಗೆ ಹೋಗಿದ್ದಾರೆ ಎಂಬುವುದು ಗೊತ್ತಾಗಿದೆ.
|
4 |
+
ದುಬೈ ಮೂಲದ ಸ್ನೇಹಿತ ಮತ್ತು ಬೆಂಗಳೂರು ಮೂಲದ ಮತ್ತೊಬ್ಬ ಸ್ನೇಹಿತ ಪ್ರಜ್ವಲ್ ಜೊತೆ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಮೂವರು ಒಟ್ಟಾಗಿ ಲಂಡನ್ಗೆ ಹೋಗಿರುವ ಸಾಧ್ಯತೆಯಿದೆ.
|
5 |
+
ಪ್ರಜ್ವಲ್ ರೇವಣ್ಣ ಕಳೆದ 20 ದಿನಗಳಿಂದ ಕುಟುಂಬದವರ ಸಂಪರ್ಕದಲ್ಲಿ ಇಲ್ಲ ಎಂದು ಹೇಳಲಾಗುತ್ತಿದೆ. ಜರ್ಮನಿಗೆ ಹೋದ ನಂತರ ಭಾರತಕ್ಕೆ ವಾಪಸ್ ಬರಲು 2 ಬಾರಿ ವಿಮಾನದ ಟಿಕೆಟ್ ಬುಕ್ ಮಾಡಿ ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದರು. ಮೇ 3 ಮತ್ತು 15ರಂದು ಬುಕ್ ಮಾಡಿದ್ದ ಟಿಕ್ ರದ್ದಾಗಿತ್ತು. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಕಣ್ಣಿಟ್ಟಿದ್ದಾರೆ.
|
6 |
+
ಈ ನಡುವೆ ಪ್ರಜ್ವಲ್ಗೆ ಎಸ್ಐಟಿ ತನಿಖಾ ತಂಡ ನೋಟಿಸ್ಗಳನ್ನು ಕೊಟ್ಟಿತ್ತು. ಪ್ರಜ್ವಲ್ ಪರ ವಕೀಲರು ವಿಚಾರಣೆಗಾಗಿ ಕಾಲಾವಕಾಶ ಕೇಳಿದ್ದರು. ಕಾಲಾವಕಾಶ ಅವಧಿ ಮುಗಿದರೂ ಸಹ ಪ್ರಜ್ವಲ್ ವಿಚಾರಣೆಗೆ ಹಾಜರಾಗದ ಕಾರಣ ಲುಕ್ಔಟ್ ನೋಟಿಸ್ ಸಹ ಜಾರಿ ಮಾಡಲಾಗಿತ್ತು.
|
7 |
+
ನಂತರ ಬ್ಲೂಕಾರ್ನರ್ ನೋಟಿಸ್ ನೀಡಿದ್ದರೂ ಸಹ ಪ್ರಜ್ವಲ್ ವಿಚಾರಣೆಗೆ ಬಂದಿಲ್ಲ. ಹಾಗಾಗಿ ಇದೀಗ ರೆಡ್ ಕಾರ್ನರ್ ನೋಟಿಸ್ ನೀಡಲು ಎಸ್ಐಟಿ ಸಿದ್ಧತೆ ಮಾಡಿಕೊಳ್ಳುತ್ತಿದೆ.
|
8 |
+
ಮತ್ತೊಂದೆಡೆ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ(ಜೂ.4) ಪ್ರಜ್ವಲ್ ಭಾರತಕ್ಕೆ ಬರಬಹುದೆಂಬ ನಿರೀಕ್ಷೆಯಿದೆ. ಮತ್ತೊಂದೆಡೆ ಕುಟುಂಬಸ್ಥರಿಂದಲೂ ವಾಪಸ್ ಬರುವಂತೆ ಪ್ರಜ್ವಲ್ಗೆ ಒತ್ತಡ ಹಾಕಲಾಗಿದೆ ಎಂದು ತಿಳಿದುಬಂದಿದೆ.ಒಟ್ಟಾರೆ ಪೆನ್ಡ್ರೈವ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ.
|
eesanje/url_46_141_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬರ ಪರಿಹಾರ ಹಣವನ್ನು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಸೂಚನೆ
|
2 |
+
ಬೆಂಗಳೂರು,ಮೇ 18-ಕಳೆದ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸರ್ಕಾರದಿಂದ ಬಿಡುಗಡೆಯಾಗಿರುವ ಪರಿಹಾರ ಧನವನ್ನು ಬ್ಯಾಂಕುಗಳು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಸೂಚಿಸಲಾಗಿದೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದ್ದಾರೆ.
|
3 |
+
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಎರಡನೇ ಹಂತದ ಬರಪರಿಹಾರವನ್ನು ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಒಟ್ಟು 40,469 ಫಲಾನುಭವಿಗಳಿಗೆ ಒಟ್ಟು 18,85,68,305 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪರಿಹಾರವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
|
4 |
+
ರೈತರಿಗೆ ಬಿಡುಗಡೆಯಾದ ಬರಪರಿಹಾರದ ಮೊತ್ತವನ್ನು ಬೆಳೆಸಾಲ ಅಥವಾ ಇತರ ಯಾವುದೇ ವಿಷಯಗಳಿಗೆ ಬ್ಯಾಂಕುಗಳಲ್ಲಿ ಕಡಿತಗೊಳಿಸುತ್ತಿರುವ ವಿಷಯವು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆ ಬಂದಿದೆ ಎಂದಿದ್ದಾರೆ.
|
5 |
+
ಸರ್ಕಾರ ಬಿಡುಗಡೆ ಮಾಡಿದ ಬರ ಪರಿಹಾರವನ್ನು ಬೆಳೆ ಸಾಲ ಅಥವಾ ಯಾವುದೇ ವಿಷಯಗಳಿಗೆ ಕಡಿತಗೊಳಿಸದಂತೆ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ನಿರ್ದೇಶನಗಳನ್ನ ಪಾಲಿಸಲು ಸೂಚಿಸಿದ್ದಾರೆ.
|
eesanje/url_46_141_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ದೇವರಾಜೇಗೌಡ ಮಾಡಿದ “100 ಕೋಟಿ ಆಫರ್” ಆರೋಪಕ್ಕೆ ಮಧು ಬಂಗಾರಪ್ಪ ಪ್ರತಿಕ್ರಿಯೆ
|
2 |
+
ಬೆಂಗಳೂರು,ಮೇ 18-ಆರೋಪಿ ಸ್ಥಾನದಲ್ಲಿರುವ ವ್ಯಕ್ತಿ ನೀಡುವ ಹೇಳಿಕೆಯ ಸತ್ಯಾಸತ್ಯತೆಗಳು ಕೂಡಾ ಚರ್ಚೆಗೆ ಅರ್ಹ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ಡ್ರೈವ್ ಪ್ರಕರಣ ಹಾಗೂ ಅತ್ಯಾಚಾರ ಆರೋಪದಡಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದರು.
|
3 |
+
ದೇವರಾಜೇಗೌಡರು ಯಾವ ಪರಿಸ್ಥಿತಿಯಲ್ಲಿದ್ದಾರೆ ಎಂಬುದನ್ನು ಪರಿಗಣಿಸಬೇಕು. ಯಾವುದೇ ಸಂದರ್ಭವಾದರೂ ಕಾನೂನು ಮೇಲುಗೈ ಸಾಧಿಸಬೇಕು. ಇಲ್ಲಿ ಪಕ್ಷ, ವ್ಯಕ್ತಿ ಮುಖ್ಯ ಅಲ್ಲ ಎಂದರು.
|
4 |
+
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ದೇವರಾಜೇಗೌಡರಿಗೆ 100 ಕೋಟಿ ರೂ. ಆಫರ್ ನೀಡಿದ್ದರು ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಲಿ, ನಾವ್ಯಾರೂ ಬೇಡ ಎನ್ನುವುದಿಲ್ಲ ಎಂದ ಸಚಿವರು, ಈ ರೀತಿಯ ಆರೋಪ ಮಾಡುವ ವ್ಯಕ್ತಿ ಯಾರು? ಆತನ ಹಿನ್ನಲೆ ಏನು? ಯಾವ ಸಂದರ್ಭದಲ್ಲಿ ಏಕೆ ಹೇಳಿದ್ದಾರೆ? ಎಂಬುದನ್ನು ಪರಿಗಣಿಸಬೇಕಾಗುತ್ತದೆ ಎಂದರು.
|
5 |
+
ಹೇಳಿಕೆಯ ಸತ್ಯಾಸತ್ಯತೆ ಕೂಡಾ ಗಮನಾರ್ಹ. ದೇವರಾಜೇಗೌಡ ಸದ್ಯಕ್ಕೆ ಆರೋಪಿ ಸ್ಥಾನದಲ್ಲಿದ್ದಾರೆ. ಆತನ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯ ಇಲ್ಲ. ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
|
6 |
+
ಚರ್ಚೆಗೆ ಗ್ರಾಸವಾದ ಹೇಳಿಕೆ :ಅತ್ಯಾಚಾರದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವ ದೇವರಾಜೇಗೌಡ ನಿನ್ನೆ ಪೊಲೀಸ್ ವ್ಯಾನಿನಲ್ಲೇ ಕುಳಿತು ಹೇಳಿಕೆ ನೀಡಿದ್ದು, ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮಗೆ 100 ಕೋಟಿ ರೂ. ಆಫರ್ ನೀಡಿದ್ದರು ಎಂದಿದ್ದಾರೆ.
|
7 |
+
ಹಾಸನದ ಗೋಪಾಲಸ್ವಾಮಿಯವರನ್ನು ಮಧ್ಯವರ್ತಿಯನ್ನಾಗಿ ಕಳುಹಿಸಿದ್ದರು. ಬಿಜೆಪಿಯ ಮುಖಂಡ ಎಲ್.ಆರ್.ಶಿವರಾಮೇಗೌಡ ಮಾತುಕತೆ ನಡೆಸಿದ್ದರು. ಬೋರಿಂಗ್ ಕ್ಲಬ್ನಲ್ಲಿ ಈ ನಿಟ್ಟಿನಲ್ಲಿ ಚರ್ಚೆಯಾಗಿತ್ತು. ತಮ ಬಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಪುರಾವೆಗಳಿವೆ. ಅವುಗಳನ್ನು ನಾನು ಯಾರಿಗೂ ಸಿಗದಂತೆ ಸಂರಕ್ಷಿಸಿಟ್ಟಿದ್ದೇನೆ. ಪೆನ್ಡ್ರೈವ್ ಪ್ರಕರಣವನ್ನು ದಾರಿ ತಪ್ಪಿಸಲು ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣಾಭೈರೇಗೌಡ, ಪ್ರಿಯಾಂಕ ಖರ್ಗೆ ಸೇರಿದಂತೆ ನಾಲ್ಕು ಮಂದಿಯ ತಂಡ ಸಕ್ರಿಯವಾಗಿದೆ ಎಂದು ದೂರಿದರು.
|
8 |
+
ನಾನು ಜೈಲಿನಿಂದ ಬಿಡುಗಡೆಯಾಗಿ ದಾಖಲೆಗಳನ್ನು ಬಹಿರಂಗಪಡಿಸಿದರೆ ರಾಜ್ಯಸರ್ಕಾರ ಪತನವಾಗಲಿದೆ ಎಂದು ದೇವರಾಜೇಗೌಡ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
|