CoolCoder44 commited on
Commit
69c11f9
·
verified ·
1 Parent(s): 7689965

5ec3810d2d500023373450a8ed63a16d8f2dfd1922f94aa0b89b4be05aeb7780

Browse files
Files changed (50) hide show
  1. eesanje/url_46_319_2.txt +7 -0
  2. eesanje/url_46_319_3.txt +15 -0
  3. eesanje/url_46_319_4.txt +13 -0
  4. eesanje/url_46_319_5.txt +9 -0
  5. eesanje/url_46_319_6.txt +13 -0
  6. eesanje/url_46_319_7.txt +7 -0
  7. eesanje/url_46_319_8.txt +8 -0
  8. eesanje/url_46_319_9.txt +9 -0
  9. eesanje/url_46_31_1.txt +7 -0
  10. eesanje/url_46_31_10.txt +7 -0
  11. eesanje/url_46_31_11.txt +10 -0
  12. eesanje/url_46_31_12.txt +11 -0
  13. eesanje/url_46_31_2.txt +13 -0
  14. eesanje/url_46_31_3.txt +12 -0
  15. eesanje/url_46_31_4.txt +11 -0
  16. eesanje/url_46_31_5.txt +12 -0
  17. eesanje/url_46_31_6.txt +9 -0
  18. eesanje/url_46_31_7.txt +8 -0
  19. eesanje/url_46_31_8.txt +8 -0
  20. eesanje/url_46_31_9.txt +12 -0
  21. eesanje/url_46_320_1.txt +7 -0
  22. eesanje/url_46_320_10.txt +4 -0
  23. eesanje/url_46_320_11.txt +9 -0
  24. eesanje/url_46_320_12.txt +9 -0
  25. eesanje/url_46_320_2.txt +10 -0
  26. eesanje/url_46_320_3.txt +17 -0
  27. eesanje/url_46_320_4.txt +10 -0
  28. eesanje/url_46_320_5.txt +7 -0
  29. eesanje/url_46_320_6.txt +13 -0
  30. eesanje/url_46_320_7.txt +13 -0
  31. eesanje/url_46_320_8.txt +9 -0
  32. eesanje/url_46_320_9.txt +13 -0
  33. eesanje/url_46_321_1.txt +7 -0
  34. eesanje/url_46_321_10.txt +15 -0
  35. eesanje/url_46_321_11.txt +5 -0
  36. eesanje/url_46_321_12.txt +10 -0
  37. eesanje/url_46_321_2.txt +10 -0
  38. eesanje/url_46_321_3.txt +7 -0
  39. eesanje/url_46_321_4.txt +9 -0
  40. eesanje/url_46_321_5.txt +11 -0
  41. eesanje/url_46_321_6.txt +7 -0
  42. eesanje/url_46_321_7.txt +7 -0
  43. eesanje/url_46_321_8.txt +14 -0
  44. eesanje/url_46_321_9.txt +16 -0
  45. eesanje/url_46_322_1.txt +7 -0
  46. eesanje/url_46_322_10.txt +11 -0
  47. eesanje/url_46_322_11.txt +16 -0
  48. eesanje/url_46_322_12.txt +7 -0
  49. eesanje/url_46_322_2.txt +8 -0
  50. eesanje/url_46_322_3.txt +13 -0
eesanje/url_46_319_2.txt ADDED
@@ -0,0 +1,7 @@
 
 
 
 
 
 
 
 
1
+ ನ.24ರೊಳಗೆ ಕಾಂತರಾಜ್ ಆಯೋಗದ ವರದಿ ಸಲ್ಲಿಕೆ
2
+ ಬೆಂಗಳೂರು,ನ.4- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ನ್ನಾಗಿ ತಮ್ಮ ಅವಧಿ ನವೆಂಬರ್ 24ಕ್ಕೆ ಮುಗಿಯಲಿದೆ. ಅದಕ್ಕೂ ಮೊದಲೇ ಸರ್ಕಾರಕ್ಕೆ ಹಿಂದಿನ ಕಾಂತರಾಜು ಆಯೋಗದ ವರದಿಯನ್ನು ಸಲ್ಲಿಸುವು ದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂತರಾಜು ವರದಿಯ ಕುರಿತು ಕೇಳಿ ಬರುತ್ತಿರುವ ಆಕ್ಷೇಪಗಳ ಬಗ್ಗೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದರು. ಹಿಂದೆ ಸಮೀಕ್ಷೆ ನಡೆಸಲಾಗಿದೆ. ಶಿಕ್ಷಕರು ದತ್ತಾಂಶ ಸಂಗ್ರಹಿಸಿದ್ದಾರೆ. ಅದನ್ನೂ ಕ್ರೋಢಿಕರಿಸಿ ವರದಿ ತಯಾರಿಸಿ, ಸರ್ಕಾರಕ್ಕೆ ಸಲ್ಲಿಸುತ್ತೇವೆ. ಸಮೀಕ್ಷೆ ಬಗ್ಗೆ ಕೇಳಿ ಬರುತ್ತಿರುವ ಟೀಕೆಗಳು ನಮಗೆ ಅದನ್ನೂ ಕ್ರೋಢಿಕರಿಸಲು ಅಡ್ಡಿ ಪಡಿಸುವುದಿಲ್ಲ ಎಂದರು.
4
+ ಕಾಂತರಾಜು ಆಯೋಗ ಸಂಗ್ರಹಿಸಿದ ಮಾಹಿತಿ ಅಸ್ಪಷ್ಟವಾಗಿದ್ದು, ಅವೈಜ್ಞಾನಿಕವಾಗಿದೆ ಎಂದು ಬಹಳಷ್ಟು ಟೀಕೆಗಳು ಕೇಳಿ ಬರುತ್ತಿವೆ. ಆದರೆ ಅದು ನಮಗೆ ಸಂಬಂಧಿಸಿದ್ದಲ್ಲ. ನಾವು ಸರ್ಕಾರಕ್ಕೆ ವರದಿ ನೀಡುತ್ತೇವೆ. ಅದರ ಬಳಿಕ ವರದಿ ವೈಜ್ಞಾನಿಕವೋ, ಅವೈಜ್ಞಾನಿಕವೋ ಎಂಬುದನ್ನು ಸರ್ಕಾರ ನಿರ್ಧರಿಸಲಿದೆ. ಟೀಕೆ ಮಾಡುವವರು ಯಾವ ಆಧಾರದ ಮೇಲೆ ಅದು ಅವೈಜ್ಞಾನಿಕ ಎಂದು ಹೇಳುತ್ತಿದ್ದಾರೋ ಗೋತ್ತಿಲ್ಲ ಎಂದರು.
5
+ ದೆಹಲಿಗೆ ಹೊಂದಿಕೊಂಡ ಹಲವು ನಗರಗಳಲ್ಲಿ ಕಂಪಿಸಿದ ಭೂಮಿ
6
+ ಹಿಂದೆ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಗೆ ಆಯೋಗದ ಕಾರ್ಯದರ್ಶಿ ಸಹಿ ಹಾಕಿರಲಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಮುಂದೆ ನಾವು ಸರ್ಕಾರಕ್ಕೆ ಸಲ್ಲಿಸುವ ವರದಿಯಲ್ಲಿ ಯಾರ ಸಹಿ ಇರಲಿದೆ, ಇರುವುದಿಲ್ಲ ಎಂದು ಬೇರೆಯವರು ಈಗಲೇ ಹೇಗೆ ಹೇಳಲು ಸಾಧ್ಯ ಎಂದು ಪ್ರಶ್ನಿಸಿದರು.
7
+ ಯಾವುದೇ ಹೇಳಿಕೆಗಳಿಗೆ ಪ್ರತಿಕ್ರಿಯಿಸದೆ ನಾವು ನಮ್ಮ ಕೆಲಸ ಮಾಡುತ್ತೇವೆ. ವರದಿಯನ್ನು ಸರ್ಕಾರಕ್ಕೆ ನೀಡುತ್ತೇವೆ. ಅದನ್ನು ನೋಡಿ ಅಂತಿಮ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುತ್ತದೆ. ಮರು ಗಣತಿ ನಡೆಸುವುದು ಸೇರಿದಂತೆ ಎಲ್ಲಲ್ಲಾ ರೀತಿಯ ನಿರ್ಧಾರಗಳನ್ನು ಸರ್ಕಾರವೇ ತೆಗೆದುಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
eesanje/url_46_319_3.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಗೊಂದಲ ಬಿಡಿ ಕೆಲಸ ಮಾಡಿ : ಸಚಿವರಿಗೆ ಸಿಎಂ ಸಲಹೆ
2
+ ಬೆಂಗಳೂರು,ನ.4- ಕಾಂಗ್ರೆಸ್‍ನಲ್ಲಿ ಇತ್ತೀಚೆಗೆ ಸೃಷ್ಟಿಯಾಗಿರುವ ಗೊಂದಲಗಳನ್ನು ಬಗೆಹರಿಸುವುದು ಮತ್ತು ಲೋಕಸಭೆ ಚುನಾವಣೆ ತಯಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಪುಟ ಸಚಿವರ ಜೊತೆ ಉಪಹಾರಕೂಟ ನಡೆಸಿದ್ದು, ಗೊಂದಲಗಳನ್ನು ಬದಿಗಿಟ್ಟು ಬರ ನಿರ್ವಹಣೆ ಮತ್ತು ಚುನಾವಣೆ ಸಿದ್ದತೆಗಳಿಗೆ ಆದ್ಯ ಗಮನ ನೀಡುವಂತೆ ಸೂಚನೆ ನೀಡಿದ್ದಾರೆ.
3
+ ಮೊದಲ ಹಂತದಲ್ಲಿ 19 ಸಚಿವರಿಗೆ ಆಹ್ವಾನ ನೀಡಲಾಗಿದ್ದು, ಬಾಕಿ ಉಳಿದ ಸಚಿವರ ಜೊತೆಗೆ ಮುಂದಿನ ಬುಧವಾರ ಅಥವಾ ಗುರುವಾರ ಉಪಹಾರಕೂಟ ನಡೆಸುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಉಪಹಾರಕೂಟದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಎಂ.ಬಿ.ಪಾಟೀಲ್, ಎಚ್.ಸಿ.ಮಹದೇವಪ್ಪ, ಜಮೀರ್ ಅಹಮ್ಮದ್ ಖಾನ್, ದಿನೇಶ್ ಗುಂಡೂ ರಾವ್, ಕೃಷ್ಣಭೈರೇಗೌಡ, ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಕೆ.ಎನ್. ರಾಜಣ್ಣ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಎನ್. ಎಸ್.ಬೋಸರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಚಿವ ಸತೀಶ್ ಜಾರಕಿಹೊಳಿ ವೈಯಕ್ತಿಕ ಕಾರಣದಿಂದಾಗಿ ಸಭೆಯಿಂದ ದೂರ ಉಳಿದಿದ್ದರು.
4
+ ಸಚಿವ ಕೆ.ಜೆ.ಜಾರ್ಜ್ ದೆಹಲಿ ಪ್ರವಾಸದಲ್ಲಿರುವುದರಿಂದ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಹೇಳಲಾಗಿದೆ.ಇತ್ತೀಚೆಗೆ ಕಾಂಗ್ರೆಸ್‍ನಲ್ಲಿ ಒಂದರ ಮೇಲೊಂದರಂತೆ ಗೊಂದಲಕಾರಿ ಹೇಳಿಕೆಗಳು ಕೇಳಿಬರುತ್ತಿದ್ದು, ಲೋಕಸಭೆ ಚುನಾವಣೆಗೆ ಕೆಟ್ಟ ಪರಿಣಾಮ ಬೀರುವ ಆತಂಕ ಸೃಷ್ಟಿಯಾಗಿತ್ತು.
5
+ ಪಕ್ಷದಲ್ಲಿ ಎರಡು ಶಕ್ತಿ ಕೇಂದ್ರಗಳು ಮತ್ತೊಮ್ಮೆ ಗಂಭೀರ ಸ್ವರೂಪದಲ್ಲಿ ಸಕ್ರಿಯಗೊಂಡಿದ್ದವು. ಡಿ.ಕೆ.ಶಿವಕುಮಾರ್ ಪರವಾಗಿ ಕೆಲವು ಶಾಸಕರು ಬ್ಯಾಟಿಂಗ್ ಮಾಡಿದರೆ, ಕೆಲವು ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬಹಿರಂಗ ಹೇಳಿಕೆ ನೀಡುವ ಮೂಲಕ ಒಳಬೇಗುದಿಗೆ ತುಪ್ಪ ಸುರಿದಿದ್ದರು. ಇದು ದಿನೇ ದಿನೇ ತೀವ್ರಗೊಳಲಾರಂಭಿಸಿ ಅಕಾರ ಹಂಚಿಕೆಯ ವಿಚಾರವನ್ನು ಹಾದಿರಂಪ ಬೀದಿರಂಪ ಮಾಡಿತ್ತು.
6
+ ಎರಡೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುತ್ತಲೇ ಕೆಲವು ಶಾಸಕರು ಬಿಜೆಪಿ ಆಪರೇಷನ್ ಕಮಲವನ್ನು ಚಾಲ್ತಿಯಲ್ಲಿಟ್ಟಿದೆ. ಕಾಂಗ್ರೆಸ್‍ನ 11ಕ್ಕೂ ಹೆಚ್ಚು ಮಂದಿ ಶಾಸಕರನ್ನು ಈಗಾಗಲೇ ಸಂಪರ್ಕಿಸಲಾಗಿದೆ. 50 ಕೋಟಿ ರೂ. ಆಮಿಷವೊಡ್ಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಅಸ್ಥಿರಗೊಳಿಸುವ ಆತಂಕವಿದೆ. ಅಂತಹ ಪರಿಸ್ಥಿತಿಯನ್ನು ನಿಭಾಯಿಸಲು ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ.ಶಿವಕುಮಾರ್ ಅವರು ಅನಿವಾರ್ಯ ಎಂದು ಬಿಂಬಿಸಲು ಯತ್ನಿಸಲಾಗಿತ್ತು.
7
+ ಇದಕ್ಕೆ ತಮ್ಮದೇ ಶೈಲಿಯಲ್ಲಿ ಮಾಸ್ಟರ್ ಸ್ಟ್ರೋಕ್ ನೀಡಿರುವ ಸಿದ್ದರಾಮಯ್ಯ, ಐದು ವರ್ಷ ನಮ್ಮ ಸರ್ಕಾರ ಅಧಿಕಾರದಲ್ಲಿರುತ್ತದೆ. ನಾನು ಮುಖ್ಯಮಂತ್ರಿಯಾಗಿದ್ದೇನೆ. ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳುವ ಮೂಲಕ ಭಾರೀ ಸಂಚಲನ ಮೂಡಿಸಿದ್ದರು.
8
+ ಅದರ ಬೆನ್ನಲ್ಲೇ ಕೆ.ಎನ್.ರಾಜಣ್ಣ ವಿವಾದಕ್ಕೆ ತುಪ್ಪ ಸುರಿಯುವಂತೆ ಸಿದ್ದರಾಮಯ್ಯ ಅವರ ಬಳಿಕ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಘೋಷಿಸಿಬಿಟ್ಟರು. ಪಕ್ಷದಲ್ಲಿ ಮೇಲಿಂದ ಮೇಲೆ ಆಕ್ರಮಣಕಾರಿ ಹೇಳಿಕೆಗಳು ಹೊರಬರುತ್ತಿರುವುದನ್ನು ಗಮನಿಸಿದ ಡಿ.ಕೆ.ಶಿವಕುಮಾರ್ ಸ್ವಲ್ಪ ತಣ್ಣಗಾದಂತಾಗಿದ್ದಾರೆ. ತಾವು ಮುಖ್ಯಮಂತ್ರಿಯಾಗುವುದಾಗಿ ಎಲ್ಲಿಯೂ ಹೇಳಿಲ್ಲ. ಹಂಚಿಕೆ ಮಾಡಿಕೊಳ್ಳಲು ಅಧಿಕಾರವೇನು ಅವರ ಸ್ವಂತ ಆಸ್ತಿಯಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ.
9
+ ದೆಹಲಿಗೆ ಹೊಂದಿಕೊಂಡ ಹಲವು ನಗರಗಳಲ್ಲಿ ಕಂಪಿಸಿದ ಭೂಮಿ
10
+ ಇದರ ಬೆನ್ನಲ್ಲೂ ರಾಮನಗರ ಹಾಗೂ ಇತರ ಭಾಗದ ಶಾಸಕರು ಡಿ.ಕೆ.ಶಿವಕುಮಾರ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೈಕಮಾಂಡ್ ನಾಯಕರು, ಶಾಸಕರು, ಕ್ಷೇತ್ರ ಅಭಿವೃದ್ಧಿ ಮತ್ತು ಸರ್ಕಾರದ ಪರವಾಗಿ ಮಾತ್ರ ಮಾತನಾಡಬೇಕು. ಅನಗತ್ಯವಾಗಿ ವಿವಾದ ಸೃಷ್ಟಿಸುವ ಹೇಳಿಕೆ ನೀಡಬಾರದು ಎಂದು ಕಟ್ಟಪ್ಪಣೆ ಮಾಡಿದ್ದರು.ಮತ್ತೊಂದು ಹೆಜ್ಜೆ ಮುಂದೆ ಹೋಗಿ ಡಿ.ಕೆ.ಶಿವಕುಮಾರ್ ಅವರು, ಗೊಂದಲದ ಹೇಳಿಕೆ ನೀಡುವ ಶಾಸಕರಿಗೆ ನೋಟಿಸ್ ನೀಡುವುದಾಗಿ ಎಚ್ಚರಿಸಿದರು. ಆದರೆ ಇದ್ಯಾವುದೂ ಫಲ ನೀಡಿದಂತೆ ಕಾಣುತ್ತಿಲ್ಲ. ಹೀಗಾಗಿ ಖುದ್ದು ಸಿದ್ದರಾಮಯ್ಯನವರೇ ಅಖಾಡಕ್ಕಿಳಿದಿದ್ದಾರೆ.
11
+ ಉಪಹಾರದ ನೆಪದಲ್ಲಿ ಸಚಿವರ ಜೊತೆ ಸಭೆ ನಡೆಸಿ ಎಲ್ಲ ಗೊಂದಲಗಳಿಗೂ ತೆರೆ ಎಳೆಯಲು ಮುಂದಾಗಿದ್ದಾರೆ. ಅಕಾರ ಹಂಚಿಕೆ, ಸಚಿವ ಸಂಪುಟ ಪುನಾರಚನೆ, ನಿಗಮಮಂಡಳಿಗಳ ನೇಮಕಾತಿ, ಲೋಕಸಭೆ ಚುನಾವಣೆ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚೆಗಳಾಗಿವೆ.
12
+ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಸಚಿವರ ನೇತೃತ್ವದಲ್ಲಿ ವೀಕ್ಷಕರ ಸಮಿತಿ ರಚಿಸಲಾಗಿದೆ. ಆದರೆ ಬಹಳಷ್ಟು ಮಂದಿ ಈವರೆಗೂ ಕ್ಷೇತ್ರಗಳಿಗೆ ತೆರಳಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುವ ಮತ್ತು ಪಕ್ಷಕ್ಕೆ ವರದಿ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿಲ್ಲ.
13
+ ಈ ಕುರಿತಂತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೊಂದಿಗಿನ ಸಭೆಯಲ್ಲಿ ಚರ್ಚಿಸಲಾಗಿತ್ತು.
14
+ ಎಲ್ಲ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರು ಒಟ್ಟಾಗಿ ಕುಳಿತು ಚರ್ಚೆ ನಡೆಸುವಂತೆ ಸಲಹೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಉಪಹಾರಕೂಟ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆ, ಆಡಳಿತದ ವಿಚಾರಗಳು, ��ರ ನಿರ್ವಹಣೆ ಹಾಗೂ ಚುನಾವಣೆ ತಯಾರಿಗೆ ಸಂಬಂಧಪಟ್ಟಂತೆ ಮಹತ್ವದ ಚರ್ಚೆಗಳಾಗಿದ್ದು, ಸಚಿವರು ಕೂಡ ಸಲಹೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.
15
+ ಮುಂದಿನ ದಿನಗಳಲ್ಲಿ ಎಲ್ಲ ಗೊಂದಲಗಳನ್ನು ಬದಿಗಿಟ್ಟು, ಚುನಾವಣೆಯತ್ತ ಗಮನಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಸಚಿವರು ಸೌಹಾರ್ದಯುತ ವಾತಾವರಣದಲ್ಲಿ ಚರ್ಚೆ ನಡೆಸಿದ್ದಾರೆ. ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗುನಗುತ್ತಾ ಎಲ್ಲರೊಂದಿಗೆ ಆತ್ಮೀಯವಾಗಿ ಮಾತನಾಡಿದ್ದು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.
eesanje/url_46_319_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ 30ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳೊಂದಿಗೆ ಸಚಿವ ಎಂ.ಬಿ.ಪಾಟೀಲ್ ಮಾತುಕತೆ
2
+ ಬೆಂಗಳೂರು, ನ.4- ಅಮೆರಿಕದ ಮಾಂಟ್ಗೊಮೆರಿ ಪ್ರಾಂತ್ಯದಿಂದ ಆಗಮಿಸಿರುವ 30ಕ್ಕೂ ಹೆಚ್ಚು ಪ್ರಮುಖ ಕಂಪನಿಗಳ ಸಿಇಒಗಳೊಂದಿಗೆ ಬಂಡವಾಳ ಹೂಡಿಕೆ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ನೇತೃತ್ವದಲ್ಲಿ ರಾಜ್ಯ ಸಚಿವರ ತಂಡ ಮಹತ್ವದ ಮಾತುಕತೆ ನಡೆಸಿದೆ.
3
+ ಸಚಿವರ ನಿಯೋಗದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರಿದ್ದರು. ಅಮೆರಿಕದ ಉದ್ಯಮಿಗಳ ನಿಯೋಗದ ನೇತೃತ್ವವನ್ನು ಮಾಂಟ್ಗೊಮೆರಿ ಪ್ರಾಂತ್ಯದ ಆಡಳಿತ ಮುಖ್ಯಸ್ಥ ಎಲ್ರಿಚ್ ಮಾರ್ಕ್ ವಹಿಸಿದ್ದರು. ನಗರದ ಪಂಚತಾರಾ ಹೋಟೆಲ್ ನಲ್ಲಿ ಸಭೆ ನಡೆಯಿತು ಎಂದು ತಿಳಿಸಲಾಗಿದೆ.
4
+ ಎಂ.ಬಿ.ಪಾಟೀಲ ಅವರು ಅಮೆರಿಕದ ಕಂಪನಿಗಳಿಂದ ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಇತ್ತೀಚೆಗೆ ಆ ದೇಶಕ್ಕೆ ಅಧಿಕೃತ ಪ್ರವಾಸ ಕೈಗೊಂಡಿದ್ದಾಗ ಅಲ್ಲಿನ ಅಮೆರಿಕ-ಭಾರತ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕೌನ್ಸಿಲ್ ಜತೆಗೂ ವಿಚಾರ ವಿನಿಮಯ ನಡೆಸಿದ್ದರು. ಜೊತೆಗೆ, ರಾಜ್ಯದಲ್ಲಿರುವ ಹೂಡಿಕೆ, ರಫ್ತು, ಉತ್ತೇಜನಾ ನೀತಿಗಳನ್ನು ಅರಿಯಲು ಕರ್ನಾಟಕಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
5
+ ಕಾಂಗ್ರೆಸ್ ಪ್ರಚಾರಕ್ಕೆ ಬೆಟ್ಟಿಂಗ್ ಹಣ ಬಳಕೆಯಾಗುತ್ತಿದೆ ; ಸ್ಮತಿ ಇರಾನಿ
6
+ ಈ ಸಂದರ್ಭದಲ್ಲಿ ಮಾತನಾಡಿದ ಎಂ.ಬಿ.ಪಾಟೀಲ, ರಾಜ್ಯದಲ್ಲಿ ಅಮೆರಿಕದ ಎರಡು ಸಾವಿರಕ್ಕೂ ಹೆಚ್ಚು ಕಂಪನಿಗಳಿದ್ದು, 2025ರ ಹೊತ್ತಿಗೆ ಇವುಗಳ ವಾರ್ಷಿಕ ವಹಿವಾಟು 230 ಬಿಲಿಯನ್ ಡಾಲರ್ ಮೀರುವ ನಿರೀಕ್ಷೆ ಇದೆ. ಈ ಕಂಪನಿಗಳು 13 ಲಕ್ಷ ಜನರಿಗೆ ಉದ್ಯೋಗ ನೀಡಿದ್ದು, ಕಳೆದ ಎರಡು ದಶಕಗಳಲ್ಲಿ ಭಾರತ ಮತ್ತು ಅಮೆರಿಕದ ವಾಣಿಜ್ಯ ವಹಿವಾಟು ಏಳು ಪಟ್ಟಿಗಿಂತ ಹೆಚ್ಚು ಬೆಳೆದಿದೆ. ಮುಂಬರುವ ದಿನಗಳಲ್ಲಿ ಅಮೆರಿಕದ ಕಂಪನಿಗಳ ಹೂಡಿಕೆ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಬೇಕು ಎಂದು ಅಭಿಪ್ರಾಯಪಟ್ಟರು.
7
+ ರಾಜ್ಯದಲ್ಲಿ ಹೂಡಿಕೆಗೆ ಪ್ರಶಸ್ತ ವಾತಾವರಣವಿದ್ದು, ಐಟಿ-ಬಿಟಿ, ಆರೋಗ್ಯ, ಶಿಕ್ಷಣ ವಿದ್ಯುನ್ಮಾನ, ವಿದ್ಯುತ್ ಚಾಲಿತ ವಾಹನ ತಯಾರಿಕೆ, ಸೆಮಿ ಕಂಡಕ್ಟರ್, ಹಸಿರು ಇಂಧನ, ನವೋದ್ಯಮ, ಡಾಟಾ ಸೈನ್ಸ್, ವೈಮಾಂತರಿಕ್ಷ ಮತ್ತು ರಕ್ಷಣೆ ಮುಂತಾದ ವಿಭಾಗಗಳಲ್ಲಿ ಅತ್ಯುತ್ತಮ ನೀತಿಗಳನ್ನು ಹೊಂದಿದೆ. ವಿದೇಶಿ ನೇರ ಹೂಡಿಕೆ, ಸಂಶೋಧನೆ ಮತ್ತು ಅಭಿವೃದ್ಧಿ, ನಾವೀನ್ಯತೆಗಳಲ್ಲಿ ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಅಮೆರಿಕದ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಅಗತ್ಯವಿರುವ ಎಲ್ಲ ಅನುಕೂಲಗಳನ್ನೂ ರಾಜ್ಯ ಸರಕಾರವು ತ್ವರಿತವಾಗಿ ಒದಗಿಸಿ ಕೊಡಲಿದೆ ಎಂದು ಅವರು ಭರವಸೆ ನೀಡಿದರು.
8
+ ಕರ್ನಾಟಕವು ಹಿಂದಿನಿಂದಲೂ ಕೈಗಾರಿಕೆ ಮತ್ತು ಬಂಡವಾಳ ಹೂಡಿಕೆ ಸ್ನೇಹ�� ರಾಜ್ಯವಾಗಿದ್ದು, ನಮ್ಮ ಜಿಡಿಪಿ 280 ಬಿಲಿಯನ್ ಡಾಲರುಗಳಷ್ಟಿದೆ. ಜೊತೆಗೆ ರಫ್ತು ವಹಿವಾಟಿನಲ್ಲೂ ದೇಶದ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದ್ದೇವೆ. ಅಲ್ಲದೆ, ಬೆಂಗಳೂರು ನಗರವು ಉದ್ಯಮಗಳ ದೃಷ್ಟಿಯಿಂದ ಜಾಗತಿಕ ಮಟ್ಟದ ಅಗ್ರ 25 ನಗರಗಳಲ್ಲಿ ಒಂದಾಗಿದೆ ಎಂದು ಸಚಿವರು ನಿಯೋಗಕ್ಕೆ ವಿವರಿಸಿದರು.
9
+ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಮಾತನಾಡಿ, ಐಟಿ ಕ್ಷೇತ್ರದಲ್ಲಿ ಇವತ್ತು ಕರ್ನಾಟಕ ಮುಂಚೂಣಿಯಲ್ಲಿ ಇರುವುದಕ್ಕೆ ಪ್ರಮುಖ ಕಾರಣವೇ ಉನ್ನತ ಶಿಕ್ಷಣ ಇಲಾಖೆ. ಅಮೆರಿಕಾ ದ ಮಾಂಟಗೊಮೇರಿ ಸೇರಿದಂತೆ ಇತರ ವಿವಿಗಳ ಜತೆಗೂ ಸಹಭಾಗಿತ್ವ ಸಾಧಿಸಲು ಆಸಕ್ತಿ ಹೊಂದಿರುವುದಾಗಿ ಹೇಳಿದರು.
10
+ ಇದಲ್ಲದೆ ರಾಜ್ಯದಲ್ಲಿ ಜಾಗತಿಕ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಿವೆ. ಉದ್ಯಮ ವಲಯವು ಇವುಗಳೊಂದಿಗೆ ಸಹಭಾಗಿತ್ವ ಹೊಂದಿದ್ದು, ಈ ವಲಯಕ್ಕೆ ಬೇಕಾಗುವ ಕೌಶಲಪೂರ್ಣ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸುವ ಸಾಮಥ್ರ್ಯವಿದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನಲ್ಲಿ 400ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳ ಆರ್ ಡಿ ಕೇಂದ್ರಗಳು ಸಕ್ರಿಯವಾಗಿವೆ. ಇವುಗಳ ಲಾಭವನ್ನು ಅಮೆರಿಕದ ಕಂಪನಿಗಳು ಪಡೆದುಕೊಳ್ಳಬೇಕು ಎಂದು ಸುಧಾಕರ್ ನುಡಿದರು.
11
+ ಮಧ್ಯಪ್ರದೇಶದಲ್ಲಿ 39 ಕಾಂಗ್ರೆಸ್ ನಾಯಕರ ಉಚ್ಚಾಟನೆ
12
+ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಮಾಂಟಗೊಮೇರಿ ಒಳ್ಳೆಯ ಕೆಲಸ ಮಾಡುತ್ತಿದ್ದು, ರಾಜ್ಯವೂ ಅದರ ಜತೆ ಕೆಲಸ ಮಾಡಲು ಉತ್ಸುಕವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಚಿವರಾದ ಸುಧಾಕರ ಮತ್ತು ದಿನೇಶ ಗುಂಡೂರಾವ್ ಅವರಿಗೆ ಮಾಂಟಗೊಮೇರಿ ಕೌಂಟಿ ಸರ್ಕಾರದ ಮೆಡಲ್ ನೀಡಿ ನಿಯೋಗ ಗೌರವಿಸಿತು.
13
+ ಅಮೆರಿಕದ ನಿಯೋಗದಲ್ಲಿ ಮಾಂಟ್ಗೊಮೆರಿ ಕೌಂಟಿ ಕೌನ್ಸಿಲ್ ಅಧ್ಯಕ್ಷ ಇವಾನ್ ಗ್ಲಾಸ್, ಅಲ್ಲಿನ ಆರ್ಥಿಕ ಅಭಿವೃದ್ಧಿ ನಿಗಮದ ಸಿಇಒ ಟಾಂಪ್ಕಿನ್ಸ್ ಬಿಲ್, ವಿಶೇಷ ಯೋಜನಾ ವ್ಯವಸ್ಥಾಪಕ ಕಾಸ್ಟೆಲ್ಲೋ ಜೂಡಿ, ಲಾ ಮ್ನಾಗ್ನೋಲಿಯಾ ಕಂಪನಿಯ ಸಂಸ್ಥಾಪಕ ಕೂಂಬಾ ಗ್ರೇವ್ಸ್, ಟಾಂಜನೈಟ್ ಫ್ರೈಟ್ ಲಾಜಿಸ್ಟಿಕ್ಸ್ ಸಿಇಒ ಮ್ಯಾಕ್ನೆಸ್ಟರ್ ಎಕ್ಸವೆರಿ ಮುಂತಾದವರು ಉಪಸ್ಥಿತರಿದ್ದರು.
eesanje/url_46_319_5.txt ADDED
@@ -0,0 +1,9 @@
 
 
 
 
 
 
 
 
 
 
1
+ ನನ್ನ ಮುಖ್ಯಮಂತ್ರಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ : ಪ್ರಿಯಾಂಕ್ ಖರ್ಗೆ
2
+ ಬೆಂಗಳೂರು, ನ.4- ಹೈಕಮಾಂಡ್ ನೀವೆ ಮುಖ್ಯಮಂತ್ರಿ ಎಂದರೆ ನಾನು ರೆಡಿ ಎಂದು ಮೈಸೂರಿನಲ್ಲಿ ನೀಡಿದ್ದ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ.
3
+ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸ್ಪಷ್ಟ ಮಾಹಿತಿ ನೀಡಿರುವ ಅವರು, ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನು ನೀಡಿರುವ ಹೇಳಿಕೆಯು ತಪ್ಪಾಗಿ ಅರ್ಥೈಸಿ ವರದಿಯಾಗುತ್ತಿರುವುದು ಈಗಷ್ಟೇ ನನ್ನ ಗಮನಕ್ಕೆ ಬಂದಿರುವ ಕಾರಣ ಗೊಂದಲ ನಿವಾರಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದಿದ್ದಾರೆ.
4
+ ಕಾಂಗ್ರೆಸ್ ಪ್ರಚಾರಕ್ಕೆ ಬೆಟ್ಟಿಂಗ್ ಹಣ ಬಳಕೆಯಾಗುತ್ತಿದೆ ; ಸ್ಮತಿ ಇರಾನಿ
5
+ ವರದಿಗಾರರು ಸಿಎಂ ಹೇಳಿದ್ದು ಸ್ವಂತ ಹೇಳಿಕೆನಾ? ಏನು? ಎಂದು ಕೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ನಾನು, ಅದು ಸಿಎಂ ಅವರೇ ಹೇಳಿದಾರೆ. ನಾನೂ ಹೇಳಿದ್ದೀನಲ್ಲಾ ಸರ್, ನಾಲ್ಕು ಜನ ಕುಳಿತುಕೊಂಡು ಚರ್ಚೆ ಮಾಡಿದಾರೆ ದೆಹಲಿಯಲ್ಲಿ, ಆ ನಾಲ್ಕು ಜನ ಹೊರತುಪಡಿಸಿ ಬೇರೆ ಯಾರೇ ಮಾತಾಡಿದರೂ ಅದಕ್ಕೆ ಬೆಲೆಯಿಲ್ಲ. ಹೈಕಮಾಂಡ್ ಹೇಳಬೇಕಲ್ವಾ? ನಾಳೆ ಹೈಕಮಾಂಡ್ ನೀವೇ ಮುಖ್ಯಮಂತ್ರಿ ಅಂದ್ರೆ ನಾನು ಯೆಸ್ ಅಂತೀನಿ ಎಂದಿದ್ದೆ. ಅದಕ್ಕೆ ವರದಿಗಾರರೊಬ್ಬರು ಯು ಆರ್ ಆಲ್ಸೋ ರೆಡಿ ? ಎಂದು ಕೇಳಿದರು. ಯು ಆರ್ ಆಲ್ಸೋ ರೆಡಿ, ಇಫ್ ಯು ಆರ್ ರೆಡಿ, ಐ ಆಮ್ ಆಲ್ಸೋ ರೆಡಿ ಎಂದಿದ್ದೇನೆ.
6
+ ನಾಳೆ ಹೈಕಮಾಂಡ್ ನೀವೇ ಮುಖ್ಯಮಂತ್ರಿ ಎಂದು ಹೇಳಿದರೆ, ನಾನು ಕೂಡ ಯೆಸ್ ಅಂತೀನಿ ಎನ್ನುವುದರ ಅರ್ಥ, ಇಲ್ಲಿ ಹೈಕಮಾಂಡ್ ವರದಿಗಾರರನನ್ನೆ ಮುಖ್ಯಮಂತ್ರಿ ಎಂದು ಹೇಳಿದರೆ, ನನ್ನ ಅಭ್ಯಂತರ ಇಲ್ಲ. ಅದನ್ನು ಒಪ್ಪಿಕೊಳ್ಳುತ್ತೇನೆ ಎಂಬುದಾಗಿತ್ತು. ಈ ಮಾತು ಹೇಳುವಾಗ ನಾನು ವರದಿಗಾರರತ್ತ ಕೈ ಸನ್ನೆ ಮಾಡಿ, ಅವರ ಕೈ ಮುಟ್ಟಿ ಹೇಳಿದ್ದೇನೆ. ನಾನು ಎಲ್ಲಿಯೂ ನನಗೆ ಹೈಕಮಾಂಡ್ ಮುಖ್ಯಮಂತ್ರಿಯಾಗು ಎಂದು ಹೇಳಿದರೆ ನಾನು ಸಿದ್ದ ಎಂದು ಹೇಳಿದ್ದಲ್ಲ. ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ನೀವೇ ಎಂಬುದು ಆ ವರದಿಗಾರನ ಕುರಿತಾಗಿ ಹೇಳಿದ್ದೇ ಹೊರತು ಪ್ರಿಯಾಂಕ್ ಖರ್ಗೆಯ ಕುರಿತಾಗಿ ಅಲ್ಲ ಎಂದು ಪುನರುಚ್ಚರಿಸಿದ್ದಾರೆ.
7
+ ನಾನು ನನಗೆ ನೀಡಿದ ಇಲಾಖೆಗಳ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ, ಶ್ರದ್ದಾಪೂರ್ವಕವಾಗಿ ನಿರ್ವಹಿಸುವುದರ ಬಗ್ಗೆ ಗಮನಿಸುತ್ತಿದ್ದೇನೆಯೇ ಹೊರತು ಇನ್ಯಾವುದೇ ಹುದ್ದೆಗಳ ಮೇಲೆ ನನ್ನ ಗಮನವಿಲ್ಲ, ಯೋಜನೆಗಳ ಮೂಲಕ ಜನರನ್ನು ತಲುಪುವುದು, ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನದ ಮೇಲೆ ಸದಾ ನನ್ನ ಗಮನವನ್ನು ಕೇಂದ್ರೀಕರಿಸಿರುತ್ತೇನೆ. ಯಾವುದೇ ಹುದ್ದೆಗಳನ್ನು ಜನರ ಅಪೇಕ್ಷೆ, ಆಶೀರ್ವಾದದಿಂದ ��ಡೆಯಬಹುದು ಹೊರತು ಲಾಭಿಯಿಂದ ಪಡೆಯಲಾಗದು, ನಮ್ಮ ರಾಜಕೀಯ ಬೆಳವಣಿಗೆ ಜನರ ನಂಬಿಕೆಯ ಮೇಲೆ ನಿಂತಿದೆ ಎಂದು ನಂಬಿಕೊಂಡು ಕೆಲಸ ಮಾಡುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
8
+ ಮಹಾರಾಷ್ಟ್ರ : ಔಷಧ ಕಂಪನಿಯಲ್ಲಿ ಬೆಂಕಿ, ಏಳು ಮಂದಿ ನಾಪತ್ತೆ
9
+ ಈ ಘಟನೆಯನ್ನು ತಪ್ಪಾಗಿ ಅರ್ಥೈಸಿ ವರದಿ ಮಾಡುತ್ತಿರುವುದು, ಸುದ್ದಿಯನ್ನು ಪರಿಶೀಲಿಸದೇ ತಿರುಚಿ ವರದಿ ಮಾಡುತ್ತಿರುವುದು. ಘಟನೆಯನ್ನು ಘಟನೆ ಎಂದು ವರದಿ ಮಾಡುವುದರ ಬದಲು, ನಾನು ಹೇಳಿಲ್ಲದ ಪದಗಳನ್ನೂ ಸೇರಿಸಿ ನಾಳೆ ನಾನೇ ಸಿಎಂ ಎಂಬ ಶೀರ್ಷಿಕೆಯಲ್ಲಾ ಸೇರಿಸಿ ವರದಿ ಮಾಡಲಾಗುತ್ತಿದೆ, ಇವೆಲ್ಲಾ ಕನ್ನಡ ಪತ್ರಿಕೋದ್ಯಮಕ್ಕೆ ಒಳ್ಳೆಯ ನಿದರ್ಶನವಲ್ಲಾ ಎಂಬುದು ನನ್ನ ನಂಬಿಕೆಯಾಗಿದೆ ಎಂದು ತಿಳಿಸಲು ಬಯಸುತ್ತೇನೆ ಎಂದು ಸಚಿವರು ಅಸಮಧಾನ ವ್ಯಕ್ತಪಡಿಸಿದ್ದಾರೆ.
eesanje/url_46_319_6.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಇದ್ದಕ್ಕಿದ್ದಂತೆ ಫುಲ್ ಆಕ್ಟಿವ್ : ಚರ್ಚೆಗೆ ಗ್ರಾಸವಾಯ್ತು ಬಿಎಸ್‍ವೈ ನಡೆ
2
+ ಬೆಂಗಳೂರು,ನ.3- ಮುಖ್ಯಮಂತ್ರಿ ಸ್ಥಾನ ದಿಂದ ಕೆಳಗಿಳಿದ ನಂತರ ವಿಧಾನಸಭೆ ಚುನಾವಣೆ ವೇಳೆಯೂ ಅಷ್ಟೊಂದು ಸಕ್ರಿಯವಾಗದೆ ತೆರೆಮರೆಯಲ್ಲಿ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದ್ದಕ್ಕಿದ್ದಂತೆ ಮತ್ತೆ ಪುಟಿದೆದ್ದಿರುವುದು ಚರ್ಚೆಗೆ ಗ್ರಾಸವಾಗಿದೆ.
3
+ ಸರಿಸುಮಾರು ಕಳೆದ ಎರಡು ವರ್ಷಗಳಿಂದ ರಾಜಕಾರಣದಲ್ಲಿ ಇದ್ದರೂ ಕೂಡ ಇಲ್ಲದಂತೆ ತೆರೆಮರೆಯಲ್ಲಿದ್ದ ಬಿಎಸ್‍ವೈ ಇದೀಗ ಮತ್ತೆ ಬರ ಅಧ್ಯಯನ ನೆಪದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವುದು ಸ್ವತಃ ಬಿಜೆಪಿಯಲ್ಲೇ ದಂಗು ಬಡಿಸಿದೆ.
4
+ ತಮ್ಮ ರಾಜಕೀಯ ಜೀವನದುದ್ದಕ್ಕೂ ದಿನದ 24 ಗಂಟೆಯೂ ಜನರ ಮಧ್ಯೆಯೇ ಬೆಳೆದು ಬಂದಿದ್ದ ಅಭಿಮಾನಿಗಳ ಪಾಲಿನ ರಾಜಾ ಹುಲಿ ಎಂದೇ ಕರೆಸಿಕೊಳ್ಳುವ ಯಡಿಯೂರಪ್ಪ ಸರ್ಕಾರದ ವಿರುದ್ಧ ಮೊದಲ ಬಾರಿಗೆ ತೊಡೆ ತಟ್ಟಿ ಅಖಾಡಕ್ಕಿಳಿದಿರುವುದು ಬಿಜೆಪಿಯಲ್ಲಿ ಹೊಸ ಹುಮ್ಮಸ್ಸು ಹುಟ್ಟಿಸಿದೆ.
5
+ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡದೆ ತಟಸ್ಥವಾಗಿದ್ದ, ಬಿಜೆಪಿ ಬೆಳವಣಿಗೆ ಬಗ್ಗೆ ಕಿಂಚಿತ್ತೂ ತಲೆ ಕೆಡಿಸಿಕೊಳ್ಳದೆ ಎಲ್ಲವನ್ನೂ ತೆರೆಮರೆಯಲ್ಲೇ ನೋಡುತ್ತಿದ್ದ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಅವರು ಸರ್ಕಾರದ ವಿರುದ್ಧ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಆರೋಪಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಪ್ರವಾಸಕ್ಕೆ ಸಜ್ಜಾಗಿದ್ದಾರೆ.
6
+ ಬಿಜೆಪಿಯಲ್ಲಿ ಎಲ್ಲರೂ ಸರಿಯಿಲ್ಲ ಎಂದು ಪ್ರತಿಪಕ್ಷಗಳು ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆ ಆರಂಭವಾಗಿರುವ ಸಂದರ್ಭದಲ್ಲಿ ಯಡಿಯೂರಪ್ಪ ಪಕ್ಷದೊಳಗೆ ಸಕ್ರಿಯವಾಗುತ್ತಿರುವುದು ಅವರ ವಿರೋಧಿ ಬಣವನ್ನು ಸಹ ನಿದ್ದೆಗೆಡುವಂತೆ ಮಾಡಿದೆ.
7
+ ಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ
8
+ ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾಯಕತ್ವ ಕೊರತೆ ತೀವ್ರವಾಗಿ ಕಾಣಿಸಿಕೊಂಡಿದ್ದು, ಒಮ್ಮತದ ನಾಯಕ ಯಾರೂ ಕಾಣಿಸುತ್ತಿಲ್ಲ. ಚುನಾವಣೆಗೂ ಮುನ್ನ ವಯಸ್ಸಿನ ಕಾರಣ ನೀಡಿ ಯಡಿಯೂರಪ್ಪನವರನ್ನು ಸಿಎಂ ಗಾದಿಯಿಂದ ಕೆಳಗಿಳಿಸಲಾಗಿತ್ತು. ಬಳಿಕ ಪಕ್ಷದಲ್ಲೂ ಯಾವುದೇ ಜವಾಬ್ದಾರಿ ನೀಡಿರಲಿಲ್ಲ.
9
+ ಪಕ್ಷದ ಹಲವು ಸಭೆಗಳಿಗೂ ಬಿಎಸ್‍ವೈ ಗೈರಾಗಿದ್ದರು. ಬಿಜೆಪಿ ರಾಜ್ಯದ ಪ್ರಶ್ನಾತೀತ ನಾಯಕನಾಗಿದ್ದ ಯಡಿಯೂರಪ್ಪ ಸೈಡ್‍ಲೈನ್ ಆಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಪಕ್ಷದ ಆಂತರಿಕ ವಲಯದಲ್ಲಿ ಇದು ಭಾರೀ ಚರ್ಚೆಯನ್ನು ಹುಟ್ಟುಹಾಕಿತ್ತು.
10
+ ಬಿಎಸ್‍ವೈ ಕಣ್ಣೊರೆಸಲು ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದರೂ, ಅದು ದೊಡ್ಡ ಮಟ್ಟದಲ್ಲಿ ಫಲಪ್ರದವಾಗಿರಲಿಲ್ಲ. ಈ ನಡುವೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತು. ಚುನಾವಣೆಯ ಸೋಲಿನ ಬಳಿಕ ಬಿಜೆಪಿಯನ್ನು ಬಲಗೊಳಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಿವೆ. ಆದರೆ ವಿಪ���್ಷ ನಾಯಕನ ಆಯ್ಕೆ ಮಾತ್ರ ಇನ್ನೂ ಆಗಿಲ್ಲ. ರಾಜ್ಯಾಧ್ಯಕ್ಷನ ಬದಲಾವಣೆಯೂ ನಡೆದಿಲ್ಲ.
11
+ ಈ ನಡುವೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಕಾರಣದಿಂದಾಗಿ ವಿಶ್ರಾಂತಿಯಲ್ಲಿದ್ದಾರೆ. ಅದರ ಹೊರತಾಗಿ ಇತರ ನಾಯಕರು ಗಮನ ಸೆಳೆಯುವ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇಂತಹ ಸಂದರ್ಭದಲ್ಲಿ ಮತ್ತೆ ಬಿಎಸ್‍ವೈ ಅಖಾಡಕ್ಕಿಳಿದಿದ್ದಾರೆ. ಬರ ಪರಿಸ್ಥಿತಿಯ ಬಗ್ಗೆ ಸರ್ಕಾರದ ವಿರುದ್ಧ ನೇರ ಹೋರಾಟಕ್ಕೆ ಇಳಿಯುವ ಎಚ್ಚರಿಕೆಯನ್ನು ನೀಡಿದ್ದಾರೆ.
12
+ ಹೀನಾಯ ಸ್ಥಿತಿಗೆ ತಲುಪಿದ ದೆಹಲಿಗಾಳಿ ಗುಣಮಟ್ಟ, ಜೀವನ ದುಸ್ತರ
13
+ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಎಸ್‍ವೈ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ನೇರವಾಗಿಯೇ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ವಿರುದ್ಧ ಬಿಜೆಪಿ ನಡೆಸಿದ ಹೋರಾಟದ ಸಂದರ್ಭದಲ್ಲೂ ಬಿಎಸ್‍ವೈಗೆ ಆದ್ಯತೆ ನೀಡಲಾಗುತ್ತಿದೆ. ಇತರ ನಾಯಕರಿಗಿಂತ ಯಡಿಯೂರಪ್ಪ ಮಾತನಾಡಿದರೆ ಅದಕ್ಕೆ ಹೆಚ್ಚಿನ ಆದ್ಯತೆ ಸಿಗುತ್ತದೆ ಎಂಬ ಮಾತನ್ನು ಬಿಜೆಪಿಯ ಕೆಲವು ನಾಯಕರು ಹೇಳುತ್ತಿದ್ದಾರೆ. ಹೀಗಾಗಿ ಸೈಲೆಂಟಾಗಿದ್ದ ಯಡಿಯೂರಪ್ಪ ಮತ್ತೆ ಮಾತನಾಡಲು ಶುರುಮಾಡಿದ್ದಾರೆ.
eesanje/url_46_319_7.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ಆಗಲು ನಾನೂ ರೆಡಿ : ಸಚಿವ ಪ್ರಿಯಾಂಕ್ ಖರ್ಗೆ
2
+ ಮೈಸೂರು,ನ.3- ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು ಎಂಬ ವಿಚಾರ ಇದು ಅವರ ವೈಯಕ್ತಿಕ ಹೇಳಿಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈ ಕಮಾಂಡ್ ಯಾರು ಸಿಎಂ ಆಗಬೇಕು, ಯಾರು ಮುಂದುವರೆಯಬೇಕು ಎಂಬುದನ್ನು ನಿರ್ಧರಿಸುತ್ತೆ ಎಂದರು.ಒಂದು ವೇಳೆ ಹೈ ಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಸಿದ್ದನಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
3
+ ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯರಿಂದ ಹಿಡಿದು ಶಾಸಕರವರೆಗೂ ತಮ್ಮ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ, ಅವರ ಹೇಳಿಕೆ, ಕಲ್ಲಿನಲ್ಲಿ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಪ್ರಿಯಾಂಕ ಖರ್ಗೆ ಮಾರ್ಮಿಕವಾಗಿ ನುಡಿದರು.
4
+ ಅಕ್ರಮವಾಗಿ ಅಮೆರಿಕ ಪ್ರವೇಶಿಸುತ್ತಿದ್ದಾಗ ಸಿಕ್ಕಿಬಿದ್ದ 96 ಸಾವಿರ ಭಾರತೀಯರು
5
+ ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? :ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು ಎಂದು ಅವರು ನುಡಿದರು.
6
+ ನಮಗೆ ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದರು.
7
+ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಇದನ್ನು ಖುದ್ದು ಬಿಜೆಪಿಯ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿಯವರು ತಮ್ಮದನ್ನು ತಾವು ನೋಡಿಕೊಳ್ಳಲಿ. ಕಾಂಗ್ರೆಸ್ ನ ಚಿಂತೆ ಅವರಿಗೆ ಬೇಡ ಎಂದು ಖಡಕ್ಕಾಗಿ ನುಡಿದರು. ನಮ್ಮ ಆದ್ಯತೆ ಐದು ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡುವುದಾಗಿದೆ ಎಂದು ಅವರು ತಿಳಿಸಿದರು.
eesanje/url_46_319_8.txt ADDED
@@ -0,0 +1,8 @@
 
 
 
 
 
 
 
 
 
1
+ ಅಂಗಾಂಗ ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ
2
+ ಬೆಂಗಳೂರು,ನ.3- ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಪರಿಶೀಲಿಸುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
3
+ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
4
+ ಬಂಡೆಗೆ ಉಂಡೆ ನಾಮ ಗ್ಯಾರಂಟಿ : ಯತ್ನಾಳ್ ವ್ಯಂಗ್ಯ
5
+ ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗು ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.
6
+ ಈ ಮೂಲಕ ಸರ್ಕಾರ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದಿದ್ದಾರೆ. ಅಂಗಾಂಗಗಳ ವೈಫಲ್ಯದಿಂದ ಪ್ರತಿನಿತ್ಯ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವು ಅನಿವಾರ್ಯವಾದಾಗ ಸಕ್ರಿಯ ಹಾಗು ಉತ್ತವ ಸ್ಥಿತಿಯಲ್ಲಿರುವ ಅಂಗಾಂಗ ದಾನದಿಂದ ಬಹಳಷ್ಟು ಜೀವಗಳ ರಕ್ಷಣೆ ಸಾಧ್ಯವಾಗುತ್ತದೆ.
7
+ ಹೀನಾಯ ಸ್ಥಿತಿಗೆ ತಲುಪಿದ ದೆಹಲಿಗಾಳಿ ಗುಣಮಟ್ಟ, ಜೀವನ ದುಸ್ತರ
8
+ ಪ್ರಸ್ತುತ ಸಂದರ್ಭದಲ್ಲಿ ಅಂಗಾಂಗಗಳ ಬೇಡಿಕೆ ಮತ್ತು ಪೂರೈಕೆ ನಡುವೆ ಅಜಗಜಾಂತರ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಂಗಾಂಗಗಳ ದಾನಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ನಿರ್ಣಯ ಮಹತ್ವದ ಉತ್ತೇಜನವಾಗಲಿದೆ ಎಂದು ಹೇಳಲಾಗುತ್ತಿದೆ.
eesanje/url_46_319_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಒಳಬೇಗುದಿ ಮುಚ್ಚಿಡಲು ಡಿಕೆಶಿ ಯತ್ನ
2
+ ಹುಬ್ಬಳ್ಳಿ,ನ.3- ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಳ ಬೇಗುದಿಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಎಲ್ಲಿದೆ ಎಂದು ಮರುಪ್ರಶ್ನಿಸಿದ್ದಾರೆ. ಮುಂದಿನ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಪ್ರಥಮ ಬಾರಿಗೆ ಘೋಷಿಸಿದ ಬಳಿಕ ಮೊದಲ ಪ್ರತಿಕ್ರಿಯೆಯಲ್ಲೇ ಡಿ.ಕೆ.ಶಿವಕುಮಾರ್ ನುಣುಚಿಕೊಳ್ಳುವ ಯತ್ನ ಮಾಡಿದ್ದಾರೆ.
3
+ ಪಕ್ಷದಲ್ಲಿ ಇರುವ ಅಸಮಾಧಾನ ಹೇಗೆ ಪರಿಹರಿಸಿಕೊಳ್ಳುತ್ತೀರಿ ಎಂದು ಕೇಳಿದಾಗ, ನಮ್ಮ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ? ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಅದರಿಂದ ಅವರ ನಾಯಕರ ಆಯ್ಕೆ ಮಾಡಲು ಆಗುತ್ತಿಲ್ಲ. ಈ ಬಗ್ಗೆ ನೀವು ಪ್ರಶ್ನೆ ಮಾಡುತ್ತಿಲ್ಲ. ಸರ್ಕಾರ ರಚನೆ ಆಗಿ ಐದಾರು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಆಗದ ಇತಿಹಾಸವನ್ನು ರಾಜ್ಯ ಅಥವಾ ದೇಶದಲ್ಲಿ ನೋಡಿದ್ದೀರಾ? ಎಂದು ತಿಳಿಸಿದರು.
4
+ ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂಬ ಹಕ್ಕೊತ್ತಾಯಗಳ ಬಗ್ಗೆ ಪ್ರತಿಕ್ರಿಯಿಸದೆ ನಿರ್ಗಮಿಸಿದ್ದಾರೆ. ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆ ಚಾಲ್ತಿಯಲ್ಲಿವೆ. ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ. ಶೇ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮೂರ್ನಾಲ್ಕು ದಿನಗಳಲ್ಲಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ ಎಂದು ತಿಳಿಸಿದರು.
5
+ ಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ
6
+ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕ್ಷೇತ್ರದಲ್ಲಿ ಸ್ಥಳೀಯ ವರ್ಚಸ್ಸು, ಜನಪ್ರಿಯತೆ, ವಾಕ್‍ಚಾತುರ್ಯ, ಪಕ್ಷ ನಿಷ್ಠೆ ಸೇರಿದಂತೆ ಹಲವು ಮಾನದಂಡಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು.
7
+ ಬಿಜೆಪಿ ಬರ ಅಧ್ಯಯನ ಪ್ರವಾಸದ ಬಗ್ಗೆ ಕೇಳಿದಾಗ, ಅವರು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ನಮ್ಮ ಸಚಿವರಾದ ಚೆಲುವರಾಯ ಸ್ವಾಮಿ ಹಾಗೂ ಕೃಷ್ಣಭೈರೇಗೌಡ ಅವರು ಅಧ್ಯಯನ ಮಾಡಿ ಸುಮಾರು 200 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಅವರು ಸುಮ್ಮನೆ ಘೋಷಣೆ ಮಾಡಿದ್ದಾರಾ? ಮಂಡ್ಯ, ಹಾವೇರಿ ಹಾಗೂ ಇತರ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಯುತ್ತಿದೆ ಎಂದು ತಿಳಿಸಿದರು.
8
+ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಹೋಗಿದೆ ನಂತರ ಏನಾಯ್ತು ಎಂದು ಕೇಳಿದಾಗ, ನಾವು ಬರ ಪರಿಹಾರಕ್ಕಾಗಿ ���ೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ. ನಾವು ಸಾವಿರ ಕೋಟಿಯಷ್ಟು ಹಣವನ್ನು ಮೀಸಲು ಇಟ್ಟಿದ್ದೇವೆ ಎಂದು ತಿಳಿಸಿದರು.
9
+ ಮುಂದುವರೆದು ಮಾತನಾಡಿದ ಅವರು, ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿವೆ. ರಾಜ್ಯದ ಜನ ಹಾಗೂ ಸರ್ಕಾರಕ್ಕೆ ಈ ಸುವರ್ಣ ಹಬ್ಬ ಆಚರಿಸಲು ಒಂದು ಅವಕಾಶವಿದೆ. ಇಡೀ ವರ್ಷ ಸಂಭ್ರಮಾಚರಣೆಗೆ ಸರ್ಕಾರ ತೀರ್ಮಾನ ಮಾಡಿದೆ. ಕನ್ನಡ ಜ್ಯೋತಿಗೆ ನಿನ್ನೆ ಚಾಲನೆ ನೀಡಲಾಗಿದೆ. ಅದರ ಮುಂದುವರಿದ ಭಾಗವಾಗಿ ಗದಗದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಸುವರ್ಣ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ಭುವನೇಶ್ವರಿ ಭವನ ನಿರ್ಮಾಣ ಘೋಷಣೆ ಮಾಡಿದ್ದಾರೆ ಎಂದರು.
eesanje/url_46_31_1.txt ADDED
@@ -0,0 +1,7 @@
 
 
 
 
 
 
 
 
1
+ ಹಾಸ್ಯ ನಟ ಚಿಕ್ಕಣ್ಣಗೆ ಮತ್ತೆ ಪೊಲೀಸರಿಂದ ಗ್ರಿಲ್
2
+ :
3
+ ಬೆಂಗಳೂರು,ಆ.29– ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಪರಿಗಣಿಸಿರುವ ನಟ ಚಿಕ್ಕಣ್ಣ ಅವರು ಇಂದು ತನಿಖಾಧಿಕಾರಿ ಮುಂದೆ 2ನೇ ಬಾರಿ ವಿಚಾರಣೆಗೆ ಹಾಜರಾದರು. ಬಸವೇಶ್ವರನಗರ ಠಾಣೆಯ ಕಟ್ಟಡದಲ್ಲಿರುವ ವಿಜಯನಗರದ ಎಸಿಪಿ ಚಂದನ್ ಅವರ ಕಛೇರಿಯಲ್ಲಿ ಇಂದು ಬೆಳಗ್ಗೆ ನಟ ಚಿಕ್ಕಣ್ಣ ಅವರು ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದಾರೆ.
4
+ ರೇಣುಕಾಸ್ವಾಮಿ ಕೊಲೆಗೂ ಮುನ್ನ ಸ್ಟೋನಿಬ್ರೋಕ್ ರೆಸ್ಟೋರೆಂಟ್ನಲ್ಲಿ ಡಿ.ಗ್ಯಾಂಗ್ನೊಂದಿಗೆ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು. ಹಾಗಾಗಿ ಚಿಕ್ಕಣ್ಣ ಅವರನ್ನು ವಿಚಾರಣೆಗೊಳಪಡಿಸಿ ತನಿಖಾಧಿಕಾರಿ ಮಾಹಿತಿ ಪಡೆದುಕೊಂಡು ಸಾಕ್ಷಿಯಾಗಿ ಪರಿಗಣಿಸಿದ್ದಾರೆ.
5
+ ಇತ್ತೀಚೆಗೆ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ದರ್ಶನ್ ಅವರನ್ನು ಚಿಕ್ಕಣ್ಣ ಭೇಟಿ ಮಾಡಿಬಂದಿದ್ದರು. ಹಾಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.’
6
+ ಇಂದು ಚಿಕ್ಕಣ್ಣ ವಿಚಾರಣೆಗೆ ಹಾಜರಾದಾಗ ಜೈಲಿನಲ್ಲಿ ದರ್ಶನ್ನನ್ನು ಯಾವ ಉದ್ದೇಶದಿಂದ, ಯಾಕೆ ಭೇಟಿ ಮಾಡಿದ್ದೀರಿ? ಅದರ ಅವಶ್ಯಕತೆ ಏನಿತ್ತು? ಎಂಬಿತ್ಯಾದಿ ಪ್ರಶ್ನೆಗಳನ್ನು ತನಿಖಾಧಿಕಾರಿ ಚಂದನ್ ಕೇಳಿ ಮಾಹಿತಿ ಪಡೆದುಕೊಂಡರು.
7
+ ವಿಚಾರಣೆ ನಂತರ ಠಾಣೆಯಿಂದ ಹೊರಬಂದ ಬಳಿಕ ತಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನನ್ನನ್ನು ಸಾಕ್ಷಿಯಾಗಿ ಮಾಡಿದ್ದಾರೆ. ಪೊಲೀಸರ ಪ್ರಶ್ನೆಗೆ ಉತ್ತರಿಸಿದ್ದೇನೆ. ಹಾಗಾಗಿ ಹೆಚ್ಚಾಗಿ ಏನೂ ಹೇಳುವಂತಿಲ್ಲ. ನಿನ್ನೆ ನನಗೆ ನೋಟಿಸ್ ಬಂದಿತ್ತು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೆ ಎಂದಷ್ಟೇ ಹೇಳಿ ತೆರಳಿದರು.
eesanje/url_46_31_10.txt ADDED
@@ -0,0 +1,7 @@
 
 
 
 
 
 
 
 
1
+ ಘಟಪ್ರಭಾ ನದಿಯಿಂದುಂಟಾಗುವ ಪ್ರವಾಹಕ್ಕೆ ಶಾಶ್ವತ ಪರಿಹಾರ : ಸಿಎಂ ಭರವಸೆ
2
+ :
3
+ ಬೆಂಗಳೂರು, ಆ.28– ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
4
+ ಕೃಷ್ಣಾದಲ್ಲಿ ತಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದ ಅವರು, ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಶೀಘ್ರ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
5
+ ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15088 ಹೆಕ್ಟೇರ್, 2021ರಲ್ಲಿ 7051 ಹೆಕ್ಟೇರ್ ಮತ್ತು 2024 ರಲ್ಲಿ 12500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದು ರೈತರ ನಿಯೋಗ ಮನವಿ ಮಾಡಿತು.
6
+ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ ರೂ. 22,500 ರಂತೆ ಪರಿಹಾರ ಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ.
7
+ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು. ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರು ಮನವಿ ಸಲ್ಲಿಸಿದರು. ಅಬಕಾರಿ ಸಚಿವ ಆರ್. ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.
eesanje/url_46_31_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಚಿವ ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳುವಂತೆ ಜೆಡಿಎಸ್-ಬಿಜೆಪಿಗೆ ಕಾಂಗ್ರೆಸ್ ಆಗ್ರಹ
2
+ -
3
+ ಬೆಂಗಳೂರು,ಆ.28– ಡಿವೈಎಸ್ಪಿ ಗಣಪತಿ ಆತಹತ್ಯೆ ಪ್ರಕರಣದಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳಿಗೆ ತಮ್ಮ ತಪ್ಪಿನ ಅರಿವಾಗಿದ್ದರೆ ಸಚಿವ ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
4
+ ಗಣಪತಿ ಅವರ ಆತಹತ್ಯೆ ಪ್ರಕರಣ ಮರುತನಿಖೆ ಕೋರಿ ಸುಪ್ರೀಂಕೋರ್ಟ್ನಲ್ಲಿ ಹೂಡಿದ್ದ ದಾವೆ ವಜಾ ಆಗಿರುವ ಹಿನ್ನಲೆಯಲ್ಲಿ ಸಾರ್ವಜನಿಕವಾಗಿ ಸಚಿವ ಕೆ.ಜೆ.ಜಾರ್ಜ್ ಅವರ ವ್ಯಕ್ತಿತ್ವಕ್ಕೆ ಮತ್ತು ನಾಯಕತ್ವಕ್ಕೆ ಮಸಿ ಬಳೆಯಲು ಪ್ರಯತ್ನಿಸಿದ ಬಿಜೆಪಿ-ಜೆಡಿಎಸ್ ಪಕ್ಷಗಳು ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಗ್ರಹಿಸಿದ್ದಾರೆ.
5
+ ಸಾರ್ವಜನಿಕ ಜೀವನದಲ್ಲಿ ಸುಳ್ಳುಗಳನ್ನೇ ಹೇಳಿಕೊಂಡು ಇನ್ನೊಬ್ಬರ ಚಾರಿತ್ರ್ಯವಧೆ ಮಾಡುವ ಕಾರ್ಯ ಒಳ್ಳೆಯ ಸಂಪ್ರದಾಯವಲ್ಲ. ಕರ್ನಾಟಕದಲ್ಲಿ ಸಭ್ಯ ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಕೇಸುಗಳನ್ನು ಸೃಷ್ಟಿಸಿದ ಖ್ಯಾತಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಸಲ್ಲುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.
6
+ ಎಂದು ಹಿಂದಿನ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಕೆ.ಜೆ. ಜಾರ್ಜ್ ಅವರನ್ನು ಡಿವೈಎಸ್ಪಿ ಗಣಪತಿ ಆತಹತ್ಯೆ ಪ್ರಕರಣದಲ್ಲಿ ಸಿಲುಕಿಸಲಾಗಿತ್ತು. ವೈಯಕ್ತಿಕ ಕಾರಣಕ್ಕೆ ಆತಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ರವರನ್ನು ಸಿಲುಕಿಸಲು ಅನೇಕ ತಂತ್ರಗಳನ್ನು ಹೆಣೆದ ವಿರೋಧ ಪಕ್ಷಗಳು, ಗಣಪತಿ ಅವರ ಪತ್ನಿ ಹೆಸರಿನಲ್ಲಿ ಪ್ರಕರಣದ ಮರುತನಿಖೆ ಕೋರಿ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿದ್ದರು.
7
+ ಪ್ರಕರಣದ ಮರುತನಿಖೆಗೆ ಆಧಾರ ಇಲ್ಲದ ಕಾರಣ ಸುಪ್ರೀಂಕೋರ್ಟ್ ಆ ಪ್ರಕರಣವನ್ನು ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಕ್ಲೀನ್ ಚಿಟ್ ಅನ್ನು ಎತ್ತಿ ಹಿಡಿದಿದೆ ಎಂದು ಪ್ರಸ್ತಾಪಿಸಿದ್ದಾರೆ.
8
+ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದೆ ಕೆ.ಜೆ.ಜಾರ್ಜ್ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ಹಲವಾರು ಸಂದರ್ಭಗಳಲ್ಲಿ ಅವರ ಮೇಲೆ ಸುಳ್ಳು ಆರೋಪ ಮಾಡಿಕೊಂಡು ಬಂದಿದೆ. ತಮ ಮೇಲಿನ ಆರೋಪ ಸುಳ್ಳು ಎಂದು ದಾಖಲೆ ಸಮೇತ ಕೆ.ಜೆ.ಜಾರ್ಜ್ ಉತ್ತರ ನೀಡಿದರೂ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒತ್ತಾಯಪೂರ್ವಕಾಗಿ ಪಾರದರ್ಶಕ ತನಿಖೆಯ ಹೆಸರಿನಲ್ಲಿ ಅವರ ರಾಜೀನಾಮೆ ಕೊಡಿಸಿದ್ದರು ಎಂದು ದೂರಿದ್ದಾರೆ.
9
+ ತದನಂತರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ದಿವಂಗತ ಗಣಪತಿ ಅವರ ಮನೆಗೆ ಹೋಗಿ ಒತ್ತಾಯಪೂರ್ವಕವಾಗಿ ಅವರ ಹೆಂಡತಿಯ ಮೂಲಕ ಪ್ರಕರಣದ ಮರುತನಿಖೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿಸಿದ್ದರು. ಕೆಲವು ಸಂದರ್ಭಗಳಲ್ಲಿ ಕುಮಾರಸ್ವಾಮಿ ಅವರು ��ಾತಿನಂತೆ ಪ್ರಕರಣ ನಡೆಸಲು ತಮಗೆ ಸಹಾಯ ಮಾಡಲಿಲ್ಲವೆಂದು ಡಿವೈಎಸ್ಪಿ ಗಣಪತಿ ಅವರ ಹೆಂಡತಿ ಹೇಳಿದ್ದಾರೆ. ಅಂತಿಮವಾಗಿ ನ್ಯಾಯಾಲಯ ಈ ಪ್ರಕರಣವನ್ನು ವಜಾಗೊಳಿಸಿದೆ ಎಂದು ತಿಳಿಸಿದ್ದಾರೆ.
10
+ ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಚಿವ ಜಾರ್ಜ್ ಅವರ ಮೇಲೆ ಕೊಲೆ ಆರೋಪ ಹೊರಿಸಿ ಸದನದ ಒಳಗೆ ಮತ್ತು ಹೊರಗೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿ ರಾಜೀನಾಮೆ ನೀಡುವಂತೆ ಮಾಡಿದ್ದರು. ತನಿಖೆಯ ಮುಖಾಂತರ ಆರೋಪ ಮುಕ್ತಾರಾದ ಕೆ.ಜೆ.ಜಾರ್ಜ್ ಸಿದ್ದರಾಮಯ್ಯ ನವರ ಸಂಪುಟದಲ್ಲಿ ಮತ್ತೆ ಸಚಿವರಾಗಿ ಸೇರ್ಪಡೆಗೊಂಡಿದ್ದರು ಎಂದು ಸರಿಸಿದರು.
eesanje/url_46_31_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಯತ್ನಾಳ್ ಅಹೋರಾತ್ರಿ ಧರಣಿ
2
+
3
+ ಬೆಂಗಳೂರು,ಆ.28-ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್‌ ಬೆಂಗಳೂರಿನ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
4
+ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನಲ್ಲಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್‌ ಉತ್ಪಾದನೆಗೆ ಸಂಬಂಧಪಟ್ಟ ಪರವಾನಗಿ ನವೀಕರಣವಾಗಿಲ್ಲ ಎಂಬ ಕಾರಣಕ್ಕಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಕಾರ್ಖಾನೆಗೆ ಬೀಗ ಹಾಕಿತ್ತು. ಇದನ್ನು ಪ್ರಶ್ನಿಸಿ ಯತ್ನಾಳ್‌ ಹೈಕೋರ್ಟ್‌ ಮೊರೆ ಹೋಗಿದ್ದರು.
5
+ ಕಳೆದ 21 ರಂದು ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ಪ್ರಕರಣದ ವಿಚಾರಣೆ ನಡೆದು ಸಹಮತಿಯ ಮೇರೆಗೆ ಕಾರ್ಯಾಚರಣೆ ಪದ್ಧತಿಯಲ್ಲಿ ಕಾರ್ಖಾನೆ ಪುನರಾರಂಭಕ್ಕೆ ಅವಕಾಶ ಮಾಡಿಕೊಡುವಂತೆ ಆದೇಶಿಸಲಾಗಿದೆ.ಆದರೆ ನ್ಯಾಯಾಲಯದ ತೀರ್ಪಿನ ಪ್ರತಿ ತಮ ಕೈ ಸೇರಿಲ್ಲ ಎಂದು ನೆಪವೊಡ್ಡಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದ್ದರು.
6
+ 15 ವರ್ಷಗಳ ಮೇಲೆ ಚಿಂಚೋಳಿಯಲ್ಲಿ ಕಾಂಗ್ರೆಸ್‌‍ ನಾಯಕ ಪಿ.ಚಿದಂಬರಂ ಸಕ್ಕರೆ ಕಾರ್ಖಾನೆ ತೆರೆಯಲು ಮುಂದಾಗಿದ್ದರು. ಅದು ದೊಡ್ಡ ಹಗರಣವಾಗಿ ಸಿಬಿಐ ತನಿಖೆಯೂ ಆಗಿತ್ತು. ಹಳೆಯ ಕಾರ್ಖಾನೆಯನ್ನು ಪುನರ್‌ ಆರಂಭಿಸಲು 11 ಸಲ ಟೆಂಡರ್‌ ಕರೆದರೂ ಯಾರೂ ಮುಂದೆ ಬಂದಿರಲಿಲ್ಲ.
7
+ ರೈತರ ಅನುಕೂಲಕ್ಕಾಗಿ ಹಾಗೂ 38 ಕೋಟಿ ರೂ. ಟೆಂಡರ್‌ ಒಪ್ಪಿಕೊಂಡು ಕಾರ್ಖಾನೆ ಆರಂಭಿಸಿದ್ದು, ಎಥೆನಾಲ್‌ ಉತ್ಪಾದನೆ ಮಾಡುತ್ತಿದ್ದೇನೆ ಎಂದು ವಿವರಿಸಿದರು.ಕಾಂಗ್ರೆಸ್‌‍ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಕಾರ್ಖಾನೆಗೆ ಬೀಗ ಹಾಕಿದೆ. ತಮಿಳುನಾಡಿನಲ್ಲಿ ಖಾಸಗಿ ಕಂಪನಿಯಲ್ಲಿ ನಿಯಮ ಉಲ್ಲಂಘಿಸಿದ್ದರೂ ಅವರಿಂದ ಕೋಟ್ಯಂತರ ರೂ. ಲಂಚ ಪಡೆದು ವ್ಯವಹಾರ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ನಮಗೆ ಸತಾಯಿಸುತ್ತಿದ್ದಾರೆ. ಹಿಂದುಳಿದ ಜಿಲ್ಲೆಯಲ್ಲಿ ಕಾರ್ಖಾನೆ ಮಾಡಿ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದು, ರೈತರ ಕಬ್ಬು ಅರೆಯಲು ದುರುದ್ದೇಶಪೂರಕವಾಗಿ ಅಡ್ಡಿಪಡಿಸಲಾಗುತ್ತಿದೆ ಎಂದು ದೂರಿದರು.
8
+ ನಿನ್ನೆ ತಡರಾತ್ರಿ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಸ್ಥಳಕ್ಕೆ ತೆರಳಿ ಬಸನಗೌಡ ಪಾಟೀಲ್‌ ಯತ್ನಾಳ್‌ರಿಗೆ ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯಸರ್ಕಾರದ ವಿರುದ್ಧ ಕಿಡಿಕಾರಿದರು.ದ್ವೇಷದ ರಾಜಕಾರಣಕ್ಕಾಗಿ ಬಸನಗೌಡ ಪಾಟೀಲ್‌ರವರಿಗೆ ತೊಂದರೆ ನೀಡಲಾಗುತ್ತಿದೆ. ಶೀಘ್ರವೇ ಹೈಕೋರ್ಟ್‌ ಆದೇಶವನ್ನು ಮಾನ್ಯ ಮಾಡದೇ ಇದ್ದರೆ ಸರ್ಕಾರದ ವಿರುದ್ಧ ನಮ ಪಕ್ಷದ ಎಲ್ಲಾ ಶಾಸಕರು, ಜನಪ್ರತಿನಿಧಿಗಳು ಒಟ್ಟಾಗಿ ಮಾಲಿನ್ಯ ನಿಯಂತ���ರಣ ಮಂಡಳಿ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದೇವೆ. ನಾಡಿದ್ದು ರೈತರೊಡಗೂಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
9
+ ನ್ಯಾಯಾಲಯದ ಆದೇಶ ತಲುಪಿಲ್ಲ ಎಂದು ನೆಪ ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ರಾಜ್ಯಸರ್ಕಾರದ ಅಡ್ವಕೇಟ್‌ ಜನರಲ್‌ರವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಪರವಾದ ವಕೀಲರು ಹಾಜರಿದ್ದರು. ಅವರ ಎದುರೇ ತೀರ್ಪು ಪ್ರಕಟವಾಗಿದೆ.
10
+ ಬಸನಗೌಡ ಪಾಟೀಲ್‌ ಯತ್ನಾಳ್‌ರವರಿಗೆ ನ್ಯಾಯಾಲಯದ ಪ್ರತಿ ಸಿಕ್ಕಿದೆ. ಆದರೆ ಮಾಲಿನ್ಯ ನಿಯಂತ್ರಣಾಧಿಕಾರಿಗಳು ದೃಢೀಕೃತ ಪ್ರತಿ ಬೇಕು ಎಂದು ಕಾಲಾಹರಣ ಮಾಡುತ್ತಿದ್ದಾರೆ. ಜೊತೆಗೆ ಕಾರ್ಯದರ್ಶಿಯವರು ಮುಖ್ಯ ಕಾರ್ಯದರ್ಶಿ, ಸಚಿವರ ಮೇಲೆ ಒಬ್ಬರ ಮೇಲೆ ಒಬ್ಬರು ಬೊಟ್ಟು ಮಾಡುತ್ತಾ ಸತಾಯಿಸಲಾಗುತ್ತಿದೆ ಎಂದು ಕಿಡಿಕಾರಿದರು.
11
+ ಇಂದು ಬೆಳಿಗ್ಗೆ ಕೂಡ ಅಶೋಕ್‌ರವರು ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ತೆರಳಿ ಯತ್ನಾಳ್‌ರವರಿಗೆ ಬೆಂಬಲ ವ್ಯಕ್ತಪಡಿಸಿದರು.
eesanje/url_46_31_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರಣೆಯತ್ತ ಎಲ್ಲರ ಚಿತ್ತ
2
+
3
+ ಬೆಂಗಳೂರು,ಆ.29-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ತನಿಖೆ ಹಾಗೂ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ ಹೈಕೋರ್ಟ್ನಲ್ಲಿ ನಡೆಯಲಿದೆ.
4
+ ಕಳೆದ ಆ.19 ರಂದು ನಡೆದಿದ್ದ ವಿಚಾರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದಿಷ್ಟು ರಿಯಾಯಿತಿಗಳು ದೊರೆತಿದ್ದವು. ಮುಂದಿನ ವಿಚಾರಣೆಯ ದಿನಾಂಕ ನಿಗದಿಯಾಗಿರುವಂತೆ ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ನ ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ.
5
+ ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ, ಪ್ರೊ.ರವಿವರ್ಮ ಕುಮಾರ್ ಹಾಗೂ ಇತರ ವಕೀಲರು ವಾದ ಮಂಡಿಸಲಿದ್ದಾರೆ. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್.ಪೊನ್ನಣ್ಣ ಪ್ರಕರಣದ ನಿಗಾವಣೆ ವಹಿಸಿದ್ದಾರೆ. ರಾಜ್ಯಪಾಲರು ಪೂರ್ವಾನುಮತಿ ನೀಡಿರುವ ಹಲವು ಪ್ರಕರಣಗಳ ತೀರ್ಪುಗಳನ್ನು ಇಂದು ಉಲ್ಲೇಖಿಸಲು ಸಿದ್ಧತೆ ನಡೆಸಿಕೊಳ್ಳಲಾಗಿದೆ.
6
+ ರಾಜ್ಯಪಾಲರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಹಾಗೂ ಭಾರತೀಯ ನ್ಯಾಯ ಸಂಹಿತೆ 218 ರಡಿ ಪೂರ್ವಾನುಮತಿ ನೀಡಿದ್ದರು. ಈ ಹಿಂದಿನ ವಿಚಾರಣೆಯಲ್ಲಿ ಪ್ರತಿವಾದಿಗಳಿಗೆ ನೋಟೀಸ್ ನೀಡಿತ್ತು. ಅದರ ಅನುಸಾರ ಪ್ರತಿವಾದಿಗಳಾದ ಟಿ.ಜೆ.ಅಬ್ರಹಾಂ, ಪ್ರದೀಪ್ ಕುಮಾರ್ ಅವರು ತಮ ಉತ್ತರವನ್ನು ಸಲ್ಲಿಸಿದ್ದಾರೆ.
7
+ 5ನೇ ಪ್ರತಿವಾದಿಯಾಗಿರುವ ಸ್ನೇಹಮಯಿ ಕೃಷ್ಣ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉತ್ತರ ನೀಡಿಲ್ಲ ಎಂದು ಹೇಳಲಾಗಿದೆ. ಸಾಂವಿಧಾನಿಕ ಹುದ್ದೆ ಹೊಂದಿರುವ ರಾಜ್ಯಪಾಲರು ಹೈಕೋರ್ಟ್ ನೋಟೀಸ್ಗೆ ಉತ್ತರ ನೀಡಬೇಕೇ? ಬೇಡವೇ ಎಂಬ ಜಿಜ್ಞಾಸೆ ಕೂಡ ಮೂಡಿದೆ.
8
+ ಪ್ರತಿವಾದಿಗಳ ಉತ್ತರದ ಆಧಾರದ ಮೇಲೆ ಸಿದ್ದರಾಮಯ್ಯ ಅವರ ಪರ ವಕೀಲರು ರಿಜಾಯಿಂಡರ್ ಸಲ್ಲಿಸಲು ತಯಾರಿ ನಡೆಸಿವೆ.ಅಭಿಷೇಕ್ ಮನುಷಿಂಘ್ವಿಯವರು ಇಂದಿನ ವಿಚಾರಣೆಯಲ್ಲಿ ಪ್ರಕರಣದ ವಾಸ್ತವಾಂಶಗಳನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ.
9
+ ಮುಖ್ಯಮಂತ್ರಿಯವರು ಯಾವುದೇ ತಪ್ಪು ಮಾಡಿಲ್ಲ, ನಿವೇಶನ ಹಂಚಿಕೆಯಲ್ಲಿ ಪ್ರಭಾವ ಬೀರಿಲ್ಲ, ಹಾಗಿದ್ದರೂ ರಾಜಕೀಯ ದುರುದ್ದೇಶದಿಂದ ಆರೋಪ ಮಾಡಲಾಗುತ್ತಿದೆ ಮತ್ತು ರಾಜಕೀಯ ದ್ವೇಷಕ್ಕಾಗಿ ತನಿಖೆಗೆ ಪೂರ್ವಾನುಮತಿ ನೀಡಲಾಗಿದೆ ಎಂದು ವಾದಿಸುವ ಸಾಧ್ಯತೆಯಿದೆ.
10
+ ಅಧಿಕಾರದಲ್ಲಿದ್ದಾಗ ಅದನ್ನು ದುರುಪಯೋಗಪಡಿಸಿಕೊಂಡು ನಿರ್ಣಯ ಕೈಗೊಂಡಿದ್ದರೆ ಅದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಅಡಿ ತನಿಖೆಗೆ ಸೂಕ್ತವಾಗಿದೆ. ಆದರೆ ಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಆದರೂ ರಾಜ್ಯಪಾಲರು ವಿಚಾರಣೆಗೆ ಪೂರ್ವಾನುಮತಿ ನೀಡಿದ್ದಾರೆ ಎಂದು ಆಕ್ಷೇಪಿಸುವ ತಯಾರಿಗಳು ನಡೆದಿವೆ.
11
+ ಮುಖ್ಯಮಂತ್ರಿಯವರ ವಿರುದ್ಧ 17ಎ ಅಡಿ ಅನುಮತಿ ಕೋರಲುೆೆ ಪೊಲೀಸ್ ಅಧಿಕಾರಿಗಳಿಗೆ ಮಾತ್ರ ಅವಕಾಶವಿದೆ. ಸಾರ್ವಜನಿಕರಿಗೆ ಪೂರ್ವಾನುಮತಿ ನೀಡಲು ಅವಕಾಶವಿಲ್ಲ. ಭಾರತೀಯ ನ್ಯಾಯ ಸಂಹಿತೆ ಕಲಂ 218 ರಡಿ ಅನುಮತಿ ನೀಡಿರುವುದು ಕೂಡ ಕಾನೂನು ಬಾಹಿರ ಎಂದು ವಾದಿಸಲಾಗುತ್ತದೆ.
12
+ ಈ ಹಿಂದೆ ನಡೆದ ವಿಚಾರಣೆಯಲ್ಲಿ ರಾಜ್ಯಪಾಲರ ಪೂರ್ವಾನುಮತಿ ಆಧರಿಸಿ ಯಾವುದೇ ಬಲವಂತದ ಕ್ರಮಗಳನ್ನು ಅನುಸರಿಸುವಂತಿಲ್ಲ ಎಂಬ ನಿರ್ದೇಶನಗನ್ನು ಹೈ ಕೋರ್ಟ್ ನೀಡಿತ್ತು ಹಾಗೂ ಕೆಳಹಂತದ ನ್ಯಾಯಾಲಯದಲ್ಲಿ ಆ.21 ರಂದು ನಡೆಯಬೇಕಿದ್ದ ವಿಚಾರಣೆಯನ್ನು ಮುಂದೂಡಲು ಸೂಚನೆ ನೀಡಿತ್ತು.
13
+ ಇಂದಿನ ವಿಚಾರಣೆಯಲ್ಲಿ ಈ ಮೊದಲು ನೀಡಿದ್ದ ನಿರ್ದೇಶನಗಳೇ ಮುಂದುವರೆಯಲಿದೆಯೇ? ಅಥವಾ ಹೊಸದಾದ ಆದೇಶಗಳು ಜಾರಿಯಾಗಲಿವೆಯೇ? ಎಂಬ ಕುತೂಹಲ ಕೆರಳಿದೆ.ಒಂದು ವೇಳೆ ನ್ಯಾಯಾಲಯ ರಾಜ್ಯಪಾಲರ ಪೂರ್ವಾನುಮತಿಯ ಕ್ರಮವನ್ನು ಎತ್ತಿಹಿಡಿದರೆ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಲಿದೆ. ಅಂತಹ ಸಂದರ್ಭದಲ್ಲಿ ರಾಜಕೀಯವಾಗಿ ಸಾಕಷ್ಟು ಏರುಪೇರುಗಳಾಗುವ ಸಾಧ್ಯತೆಯಿದೆ.
eesanje/url_46_31_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿನಿಮಾ ಸ್ಟೈಲ್‌ನಲ್ಲೇ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ
2
+
3
+ ಬೆಂಗಳೂರು,ಆ.29-ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಖ್ಯಾತ ಚಿತ್ರ ನಟ ಡಿ ಬಾಸ್‌‍ ದರ್ಶನ್‌ ಅವರನ್ನು ಸಿನಿಮಾ ಸ್ಟೈಲ್‌ನಲ್ಲೇ ಅವರ ಅಭಿಮಾನಿಗಳು ಮತ್ತು ಪತ್ರಕರ್ತರ ಕಣ್ತಪ್ಪಿಸಿ ಪರಪ್ಪನ ಅಗ್ರಹಾರ ಬಂಧಿಖಾನೆಯಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
4
+ ಜೈಲಿನಲ್ಲಿ ದರ್ಶನ್‌ ರೌಡಿ ಗ್ಯಾಂಗ್‌ನೊಂದಿಗೆ ನಡೆಸುತ್ತಿದ್ದ ಮೋಜು ಮಸ್ತಿಯ ವಿಷಯ ಬಹಿರಂಗವಾಗುತ್ತಿದ್ದಂತೆ ಸರ್ಕಾರ ನ್ಯಾಯಲಯದ ಅನುಮತಿ ಪಡೆದು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿತ್ತು. ಜೈಲು ವರ್ಗಾವಣೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕರೂ ದರ್ಶನ್ ಅವರನ್ನು ಬಳ್ಳಾರಿಗೆ ಸ್ಥಳಾಂತರಿಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಸ್ವಲ್ಪ ಹೆಚ್ಚು ಕಮಿಯಾದರೂ ಮತ್ತೆ ಪೊಲೀಸರೇ ಅದಕ್ಕೆ ಹೊಣೆಗಾರರಾಗಬೇಕಿತ್ತು.
5
+ ಹೀಗಾಗಿ ಯಾರಿಗೂ ತಿಳಿಯದಂತೆ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಮಾಸ್ಟರ್‌ ಪ್ಲಾನ್‌ ಒಂದನ್ನು ಸಿದ್ದಪಡಿಸಿಕೊಂಡು ಕೊಲೆ ಪ್ರಕರಣದಲ್ಲಿ ಖಳನಾಯಕನಾಗಿರುವ ದರ್ಶನ್‌ ಅವರನ್ನು ಸಿನಿಮಾ ಸ್ಟೈಲ್‌ನಲ್ಲೇ ಬಳ್ಳಾರಿಗೆ ಸ್ಥಳಾಂತರಿಸುವ ಪ್ಲಾನ್‌ ರೂಪಿಸಿದರು.
6
+ ಏನದು ಮಾಸ್ಟರ್‌ ಪ್ಲಾನ್‌: ದರ್ಶನ್‌ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿ ಅವರ ಊರು ಚಿತ್ರದುರ್ಗ ಹೀಗಾಗಿ ದರ್ಶನ್‌ ಅವರನ್ನು ಅದೇ ಮಾರ್ಗವಾಗಿ ಬಳ್ಳಾರಿಗೆ ಕರೆದೊಯ್ದರೆ ಏನಾದರೂ ಅನಾಹುತ ಸಂಭವಿಸಬಹುದು ಎಂಬ ದೂರಾಲೋಚನೆ ಮಾಡಿದ ಖಾಕಿ ಪಡೆ ಅದಕ್ಕಾಗಿಯೇ ಒಂದು ಮಾಸ್ಟರ್‌ ಪ್ಲಾನ್‌ ಸಿದ್ದಪಡಿಸಿತು.
7
+ ಹಲಸೂರು ಉಪವಿಭಾಗದ ಎಸಿಪಿ ರಂಗಪ್ಪ ನೇತೃತ್ವದ ಒಂದು ತಂಡ ದರ್ಶನ್‌ ಅವರನ್ನು ತುಮಕೂರು-ಶಿರಾ-ಚಿತ್ರದುರ್ಗದ ಮಾರ್ಗದಲ್ಲಿ ದರ್ಶನ್‌ ಅವರನ್ನು ಬಳ್ಳಾರಿಗೆ ಕರೆದೊಯ್ಯಲು ತೀರ್ಮಾನಿಸಲಾಯಿತು.ಅದೇ ಸಂದರ್ಭದಲ್ಲಿ ಎಸಿಪಿ ಸದಾನಂದ ತಿಪ್ಪಣವರ್‌ ನೇತೃತ್ವದ ಮತ್ತೊಂದು ಪೊಲೀಸ್‌‍ ತಂಡವೂ ಬಿಗಿ ಭದ್ರತೆಯಲ್ಲಿ ಚಿಕ್ಕಬಳ್ಳಾಪುರ-ಆನಂತಪುರ-ಮೋಕಾ ಮಾರ್ಗವಾಗಿ ಬಳ್ಳಾರಿಗೆ ಪ್ರಯಾಣ ಬೆಳೆಸಿತು.
8
+ ಈ ಎರಡು ಪೊಲೀಸ್‌‍ ತಂಡದಲ್ಲಿ ದರ್ಶನ್‌ ಅವರನ್ನು ಯಾವ ತಂಡದ ಜೊತೆ ಬಳ್ಳಾರಿಗೆ ಕರೆದೊಯ್ಯಲಾಗುತ್ತಿದೆ ಎಂಬ ವಿಚಾರ ಪೊಲೀಸರಿಗೆ ಬಿಟ್ಟರೆ ಬೇರೆ ಯಾರಿಗೂ ತಿಳಿದಿರಲಿಲ್ಲ.
9
+ ಇಬ್ಬರು ಎಸಿಪಿಗಳ ನೇತೃತ್ವದ ತಂಡಗಳು ಸಿನಿಮಾ ಸ್ಟೈಲ್‌ನಂತೆ ಮಧ್ಯ ದರ್ಶನ್‌ ಇರುವ ಪೊಲೀಸ್‌‍ ವ್ಯಾನ್‌ ಅದರ ರಕ್ಷಣೆಗಾಗಿ ಮುಂದೆ ಎರಡು ಜೀಪ್‌ ಹಾಗೂ ಹಿಂದೆ ಎರಡು ಜೀಪ್‌ಗಳಲ್ಲಿ ತಮ ಪ್ರಯಾಣ ಆರಂಭಿಸಿದವು. ಎರಡು ಮಾರ್ಗದ ಪ್ರಯಾಣ ಒಂದೇ ಸಮಯದಲ್ಲಿ ಆರಂಭವಾದರೂ ಬಳ್ಳಾರಿ ತಲುಪುವ ಸಮಯದಲ್ಲಿ ವ್ಯತ್ಯಾಸವಿತ್ತು.
10
+ ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಸಂಚರಿಸಿದ ಟೀಮ್‌ ಬೆಳಿಗ್ಗೆ 3.45ರ ಸ��ಮಾರಿಗೆ ಬಳ್ಳಾರಿ ತಲುಪಿದರೆ ತುಮಕೂರು ಮಾರ್ಗದ ತಂಡ 4.30ರ ಸುಮಾರಿಗೆ ಬಳ್ಳಾರಿ ತಲುಪಿತ್ತು. ಆದರೆ ಈ ಎರಡು ವಾಹನಗಳಲ್ಲಿ ದರ್ಶನ್‌ ಅವರನ್ನು ಯಾವ ಮಾರ್ಗದಲ್ಲಿ ಬಳ್ಳಾರಿಗೆ ಕರೆದುಕೊಂಡು ಬರಲಾಯಿತು ಎಂಬುದು ಮಾತ್ರ ಯಾರಿಗೂ ಗೊತ್ತಿರಲಿಲ್ಲ.
11
+ ಚಿತ್ರದುರ್ಗದ ಮಾರ್ಗವಾಗಿ ಕರೆದುಕೊಂಡು ಬಂದರೆ ಒಂದು ವೇಳೆ ಅಲ್ಲಿ ಏನಾದರೂ ಅಪತ್ತು ಎದುರಾದರೆ ಕಷ್ಟ ಎಂಬುದನ್ನು ಮನಗಂಡ ಪೊಲೀಸರು ಚಿಕ್ಕಬಳ್ಳಾಪುರದ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪೊಲೀಸ್‌‍ ಟೀಮ್‌ನೊಂದಿಗೆ ದರ್ಶನ್‌ ಅವರನ್ನು ಸುರಕ್ಷಿತವಾಗಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದೆ.
12
+ ದರ್ಶನ್‌ ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂದೆ ಜಮಾಯಿಸಿ ತಮ ನಾಯಕನ ಪರ ಘೋಷಣೆ ಕೂಗುವ ಮುನ್ನವೇ ಡಿ ಬಾಸ್‌‍ ಅವರನ್ನು ಸಿನಿಮಾ ಸ್ಟೈಲ್‌ನಲ್ಲೇ ಬಳ್ಳಾರಿ ಜೈಲು ಮುಟ್ಟಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರ ಕಾರ್ಯಚರಣೆಯನ್ನು ಹಿರಿಯ ಪೊಲೀಸ್‌‍ ಅಧಿಕಾರಿಗಳು ಹಾಗೂ ಪ್ರಜ್ಞಾವಂತ ನಾಗರೀಕರು ಶ್ಲಾಘಿಸಿದ್ದಾರೆ.
eesanje/url_46_31_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್‌ ಶಿಫ್ಟ್, ಇಲ್ಲಿದೆ ಡೀಟೇಲ್ಸ್
2
+
3
+ ಬೆಂಗಳೂರ,ಆ.29-ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರನ್ನು ಅವರ ಅಭಿಮಾನಿಗಳ ಕಣ್ತಪ್ಪಿಸಿ ಇಂದು ಮುಂಜಾನೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಪೊಲೀಸ್‌‍ ಬಿಗಿಬಂದೋಬಸ್ತ್‌ನಲ್ಲಿ ಸ್ಥಳಾಂತರಿಸಲಾಯಿತು.
4
+ ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರದಿಂದ ಪೊಲೀಸ್‌‍ ವಾಹನದಲ್ಲಿ ದರ್ಶನ್‌ ಅವರನ್ನು ತುಮಕೂರು, ಚಿತ್ರದುರ್ಗ ಮೂಲಕ ಕರೆದೊಯ್ದು ಬೆಳಗ್ಗೆ 10.30ರ ಸುಮಾರಿಗೆ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
5
+ ಅಭಿಮಾನಿಗಳ ಕಣ್ತಪ್ಪಿಸಿ ದರ್ಶನ್‌ನನ್ನು ಬಳ್ಳಾರಿಗೆ ಕರೆದೊಯ್ಯುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರವಾಗುತ್ತಿರುವ ವಿಷಯ ತಿಳಿದು ಇಂದು ಮುಂಜಾನೆಯಿಂದಲೇ ಅವರ ನೂರಾರು ಅಭಿಮಾನಿಗಳು ಬಳ್ಳಾರಿ ಕಾರಾಗೃಹ ಬಳಿ ಜಮಾಯಿಸಿದ್ದರು.
6
+ ಅಭಿಮಾನಿಗಳನ್ನು ನಿಯಂತ್ರಿಸಲು ಕಾರಾಗೃಹದ ಸುತ್ತ ಪೊಲೀಸ್‌‍ ಬಿಗಿಬಂದೋಬಸ್ತ್‌ ಮಾಡಲಾಗಿತ್ತು. ಕಾರಾಗೃಹದ ಬಳಿ ದರ್ಶನ್‌ನನ್ನು ಕರೆತರುತ್ತಿದ್ದಂತೆ ಅಭಿಮಾನಿಗಳು ಡಿ ಬಾಸ್‌‍ ಡಿ ಬಾಸ್‌‍ ಎಂದು ಜೈಕಾರ ಕೂಗಿ ತಮ ಅಭಿಮಾನ ಮೆರೆದರು.
7
+ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಫೋಟೋ ವೈರಲ್ಲಾಗುತ್ತಿದ್ದಂತೆ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿ ಬಳ್ಳಾರಿ ಕಾರಾಗೃಹಕ್ಕೆ ಜೈಲಾಧಿಕಾರಿಗಳು ಸ್ಥಳಾಂತರ ಮಾಡಿದ್ದಾರೆ.
8
+ ನಿನ್ನೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಸ್ಥಳಾಂತರಿಸಲು ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಪ್ರಕ್ರಿಯೆ ಮುಗಿಸಲು ತಡವಾದ ಕಾರಣ ಇಂದು ಮುಂಜಾನೆ ದರ್ಶನ್‌ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಕರೆತರಲಾಗಿದೆ.
9
+ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ ಕಾಫಿ ಕುಡಿಯುತ್ತಾ, ಒಂದು ಕೈಯಲ್ಲಿ ಸಿಗರೇಟ್‌ ಇರುವ ಫೋಟೋ ವೈರಲ್ಲಾಗಿದ್ದರ ಜೊತೆಗೆ ತಮ ಸೆಲ್‌ನಿಂದಲೇ ವಿಡಿಯೋ ಕಾಲ್‌ನಲ್ಲಿ ರೌಡಿಯ ಮಗನೊಂದಿಗೆ ಮಾತನಾಡಿರುವುದು ಕೂಡ ದರ್ಶನ್‌ಗೆ ಕಂಟಕವಾಗಿ ಪರಿಣಮಿಸಿತ್ತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಜೈಲಿನ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ ಒಂಬತ್ತು ಮಂದಿಯ ತಲೆದಂಡವೂ ಆಗಿದೆ.
10
+ ದರ್ಶನ್‌ ಗಾಂಗ್‌ ಛಿದ್ರ:ರೇಣಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸಹಚರರಿಗೂ ಸಂಕಷ್ಟ ಎದುರಾಗಿದ್ದು, ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಆದೇಶಿಸಿದೆ. ಮೂವರು ಆರೋಪಿಗಳು ಈಗಾಗಲೇ ತುಮಕೂರು ಜೈಲಿನಲ್ಲಿದ್ದು, ಮತ್ತೆ ಮೂವರನ್ನು ಮೈಸೂರು ಕಾರಾಗೃಹಕ್ಕೆ ಸ್ಥಳಾಂತರ ಮಾಡಲು ಸಿದ್ದತೆ ನಡೆಯುತ್ತಿದೆ.
11
+ ಮೈಸೂರು ಕಾರಾಗೃಹದಲ್ಲಿ 20 ಬ್ಯಾರೆಕ್‌ಗಳಿದ್ದು ಒಟ್ಟು 850 ಕೈದಿಗಳಿದ್ದಾರೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ��ೆಲವು ಆರೋಪಿಗಳು ಮೈಸೂರಿಗೆ ಸ್ಥಳಾಂತರವಾಗುತ್ತಿರುವುದರಿಂದ ಜೈಲಿನ ಅಧಿಕಾರಿಗಳು ಸಿಸಿಟಿವಿ ಕಣ್ಗಾವಲು ಸೇರಿದಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಪ್ರಕರಣದ ಮೊದಲನೇ ಆರೋಪಿ ಪವಿತ್ರಗೌಡ ಮಾತ್ರ ಇದೀಗ ಪರಪ್ಪನ ಅಗ್ರಹಾರ ಕಾರಾಗೃಹದಲ್ಲೇ ಉಳಿದುಕೊಂಡಿದ್ದಾರೆ.
eesanje/url_46_31_5.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿಎಂ-ಸಚಿವರ ಜೊತೆ 16ನೇ ಹಣಕಾಸು ಆಯೋಗದ ಮಹತ್ವದ ಸಭೆ
2
+ 16th -
3
+ ಬೆಂಗಳೂರು,ಆ.29-ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡುವ 16ನೇ ಹಣಕಾಸು ಆಯೋಗ ಕಳೆದ 2 ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು ಹಲವು ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದೆ.
4
+ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಸಚಿವರು, ಯೋಜನಾ ಆಯೋಗ, ಹಣಕಾಸು ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ಮಹತ್ವದ ಸಭೆ ನಡೆದಿದೆ.
5
+ ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರ ತನ್ನ ಪ್ರಸ್ತಾವನೆಗಳನ್ನು ಮಂಡಿಸಲು ಹಲವು ತಿಂಗಳುಗಳಿಂದಲೂ ತಯಾರಿ ನಡೆಸಿತ್ತು. ಪ್ರತಿಯೊಂದು ಇಲಾಖೆಯಿಂದಲೂ ಖರ್ಚು ವೆಚ್ಚಗಳ ಹಾಗೂ ಆಸ್ತಿ ಸೃಜನೆಗೆ ಸಂಬಂಧಪಟ್ಟಂತ ಮಾಹಿತಿಗಳನ್ನು ದೃಢೀಕರಿಸಲಾಗಿತ್ತು. ಕಳೆದ ವಾರವೇ 16ನೇ ಹಣಕಾಸು ಆಯೋಗಕ್ಕೆ ರಾಜ್ಯಸರ್ಕಾರದ ಪ್ರಸ್ತಾವನೆಗಳನ್ನು ಸಲ್ಲಿಕೆ ಮಾಡಲಾಗಿದ್ದು, ಕಳೆದೆರಡು ದಿನಗಳಿಂದ ನಡೆಯುತ್ತಿರುವ ಸರಣಿ ಸಭೆಯಲ್ಲಿ ವಿಸ್ತೃತವಾದ ಚರ್ಚೆಗಳು ನಡೆದಿವೆ.
6
+ ಮುಖ್ಯಮಂತ್ರಿಯವರು ರಾಜ್ಯಸರ್ಕಾರದ ಪ್ರತಿಪಾದನೆಗಳನ್ನು ಆಯೋಗದ ಮುಂದೆ ಪ್ರಬಲವಾಗಿ ಮಂಡಿಸಿದ್ದಾರೆ.ಈ ಹಿಂದೆ15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ರಾಜ್ಯಕ್ಕೆ ಸುಮಾರು 1.50 ಲಕ್ಷ ಕೋಟಿ ರೂ.ಗಳು ನಷ್ಟವಾಗಿತ್ತು. ಮಧ್ಯಂತರ ಶಿಫಾರಸ್ಸಿನಲ್ಲಿ ಕರ್ನಾಟಕ ಕುರಿತಂತೆ ವ್ಯಕ್ತವಾಗಿದ್ದ ಅನುಕಂಪ ಅಂತಿಮ ವರದಿಯಲ್ಲಿ ಇರಲಿಲ್ಲ. ಹೀಗಾಗಿ ಮೇಲ್ನೋಟಕ್ಕೆ 11,500 ಕೋಟಿ ರೂ.ಗಳು ಖೋತಾ ಆಗಿತ್ತು.
7
+ ಕೇಂದ್ರ ಸರ್ಕಾರ ಜಿಎಸ್‌‍ಟಿ ಸೇರಿದಂತೆ ಇತರೆ ತೆರಿಗೆಯ ಸಂಪನೂಲಗಳನ್ನು ಹಂಚಿಕೆ ಮಾಡಲು ಅನುಸರಿಸುತ್ತಿರುವ ಮಾನದಂಡಗಳ ಕುರಿತಾಗಿಯೇ ಒಂದಿಷ್ಟು ಆಕ್ಷೇಪಗಳು ವ್ಯಕ್ತವಾಗಿವೆ.
8
+ ದಕ್ಷಿಣ ಭಾರತದಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಪ್ರಗತಿಪರ ರಾಜ್ಯಗಳು ಜನಸಂಖ್ಯೆ ನಿಯಂತ್ರಣ, ಸಂಪನೂಲ ಕ್ರೂಢೀಕರಣಗಳ ವಿಚಾರದಲ್ಲಿ ಮುಂದಿವೆ. ಅಭಿವೃದ್ಧಿ ವಿಚಾರದಲ್ಲಿಯೂ ರಾಜ್ಯ ಮುಂಚೂಣಿ ಸ್ಥಾನದಲ್ಲಿದೆ.
9
+ 15ನೇ ಹಣಕಾಸು ಆಯೋಗ ಒಕ್ಕೂಟ ವ್ಯವಸ್ಥೆಯಲ್ಲಿ ಹಿಂದುಳಿದ ರಾಜ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಒತ್ತಿ ಹೇಳಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ದೊರೆಯುತ್ತಿದ್ದ ತೆರಿಗೆಯ ಪಾಲು 10, 11ನೇ ಸ್ಥಾನದಲ್ಲಿತ್ತು. ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಆದರೆ ಸಂಪನೂಲ ಮರುಗಳಿಕೆಯ ವಿಷಯದಲ್ಲಿ 12ನೇ ಸ್ಥಾನದಲ್ಲಿತ್ತು. ಹೀಗಾಗಿ 16ನೇ ಹಣಕಾಸು ಆಯೋಗದ ಶಿಫಾರಸ್ಸಿನಲ್ಲಿ ಹಿಂದಿನ ಅನ್ಯಾಯಗಳು ಮರುಕಳಿಸಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯನವರ ಸರ್ಕಾರ ಕಟ್ಟೆಚ್ಚರ ವಹಿಸಿದೆ.
10
+ ರಾಜ್ಯದ ಪರಿಸ್ಥಿತಿ ಅಧ್ಯಯನಕ್ಕಾಗಿ ಆಗಮಿಸಿರುವ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಅವರ ಕುಟುಂಬದವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಕುಟುಂಬದ ಸದಸ್ಯರಿಗೆ ಪ್ರೇಕ್ಷಣೀಯ ಸ್ಥಳಗಳ ಪ್ರವಾಸ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶತಾಯಗತಾಯ 16ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಹೆಚ್ಚಿನ ಅನುಕೂಲ ಪಡೆದುಕೊಳ್ಳುವ ಇರಾದೆಯನ್ನು ಸಿದ್ದರಾಮಯ್ಯನವರ ಸರ್ಕಾರ ಹೊಂದಿದೆ.
11
+ ಪಂಚಖಾತ್ರಿ ಯೋಜನೆಗಳ ಜಾರಿಯಿಂದ ಆರ್ಥಿಕ ಒತ್ತಡಕ್ಕೆ ಸಿಲುಕಿರುವ ಸರ್ಕಾರಕ್ಕೆ ಕೇಂದ್ರದ ನೆರವು ಅತ್ಯಗತ್ಯ ಎಂಬ ಪರಿಸ್ಥಿತಿ ಇದೆ. ಆದರೆ ಈವರೆಗಿನ ಹಲವು ಬೆಳವಣಿಗೆಗಳಿಂದ ಕೇಂದ್ರಸರ್ಕಾರ ಸಮರ್ಪಕ ಅನುದಾನ ಬಿಡುಗಡೆ ಮಾಡದೆ ಸತಾಯಿಸುತ್ತಿದೆ.
12
+ ಬರ ಪರಿಹಾರಕ್ಕಾಗಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಬೇಕಾದ ಪರಿಸ್ಥಿತಿ ಬಂದಿತ್ತು. ಇತ್ತೀಚೆಗೆ ನೆರೆ ಪರಿಸ್ಥಿತಿಯಿಂದಾಗಿ ಒಂದಷ್ಟು ಹಾನಿಯಾಗಿದೆ. ಅದರ ಪರಿಹಾರ ಬಿಡುಗಡೆಗೂ ಈವರೆಗೂ ಯಾವುದೇ ಪ್ರಕ್ರಿಯೆಗಳು ಕಂಡುಬಂದಿಲ್ಲ.ಹೀಗಾಗಿ 16ನೇ ಹಣಕಾಸು ಆಯೋಗದ ಸಹಾನುಭೂತಿಯನ್ನು ಗಿಟ್ಟಿಸಲು ರಾಜ್ಯಸರ್ಕಾರ ಇನ್ನಿಲ್ಲದ ಸರ್ಕಸ್‌‍ ನಡೆಸುತ್ತಿದೆ.
eesanje/url_46_31_6.txt ADDED
@@ -0,0 +1,9 @@
 
 
 
 
 
 
 
 
 
 
1
+ ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ
2
+ :
3
+ ಬೆಂಗಳೂರು, ಆ.28– ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ತಾವು ಬದ್ಧರಾಗಿದ್ದು, ಹೈಕಮಾಂಡ್‌ ಜೊತೆ ಚರ್ಚಿಸಿ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
4
+ ತಮ ನಿವಾಸ ಕಾವೇರಿಯಲ್ಲಿಂದು ಮಾದಿಗ ಸಮುದಾಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅವರು, ಒಳಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ಅನುಸಾರ ನಡೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
5
+ ರಾಜ್ಯದಲ್ಲಿ ಒಳಮೀಸಲಾತಿ ವಿಚಾರವಾಗಿ ಹಲವು ದಿನಗಳಿಂದಲೂ ವಾದ-ವಿವಾದಗಳು ತೀವ್ರಗೊಂಡಿವೆ. ಈ ಹಿಂದೆ ಎಸ್‌‍.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದರು. ಸಮಿತಿ ಚರ್ಚೆ ನಡೆಸಿ ವರದಿ ನೀಡಿತ್ತು. ಆದರೆ ಅದು ಅವೈಜ್ಞಾನಿಕ ಎಂಬ ಕಾರಣಕ್ಕೆ ಪ.ಜಾತಿಯಲ್ಲಿರುವ ಕೆಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದವು.
6
+ ಸದಾಶಿವ ಆಯೋಗದ ವರದಿ ಯನ್ನು ಜಾರಿಗೊಳಿಸಬೇಕೆಂದು ಮಾದಿಗ ಸಮುದಾಯ ಮೊದಲಿನಿಂದಲೂ ಪಟ್ಟು ಹಿಡಿದಿದೆ. ಕೆಲವು ಸಮುದಾಯಗಳು ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದರಿಂದಾಗಿ ಎರಡು ದಶಕದಿಂದಲೂ ವಿವಾದ ನೆನೆಗುದಿಗೆ ಬಿದ್ದಿದೆ.
7
+ ಈ ಹಿಂದೆ ಬಿಜೆಪಿಯ ಬಸವರಾಜ ಬೊಮಾಯಿ ನೇತೃತ್ವದ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ತಿರಸ್ಕಾರ ಮಾಡಿತ್ತು.ಆದರೆ ಅದರಲ್ಲಿನ ಶಿಫಾರಸ್ಸುಗಳನ್ನು ಪರಿಗಣಿಸಿ ಪರಿಶಿಷ್ಟ ಜಾತಿಯಲ್ಲಿರುವ ಎಡಗೈ ಸಮುದಾಯ, ಬಲಗೈ ಸಮುದಾಯ, ಬೋವಿ, ಲಂಬಾಣಿ ಹಾಗೂ ಇತರ ಜಾತಿಗಳಿಗೆ ಒಳಮೀಸಲಾತಿಯನ್ನು ಹಂಚಿಕೆ ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ಸಂವಿಧಾನ ತಿದ್ದುಪಡಿ ಮಾಡುವಂತೆಯೂ ಮನವಿ ಮಾಡಲಾಗಿತ್ತು.
8
+ ಈ ನಡುವೆ ವಿವಿಧ ರಾಜ್ಯಗಳಲ್ಲಿ ಇದೇ ರೀತಿಯ ಒಳಮೀಸಲಾತಿ ಬೇಡಿಕೆಗಳು ಕೇಳಿಬಂದಿದ್ದರಿಂದಾಗಿ ಪ್ರಕರಣ ಸುಪ್ರೀಂಕೋರ್ಟ್‌ನ ಅಂಗಳದಲ್ಲಿ ಇದೇ ತಿಂಗಳ ಆರಂಭದಲ್ಲಿ ತೀರ್ಪು ನೀಡಿರುವ ನ್ಯಾಯಾಲಯ ಒಳಮೀಸಲಾತಿ ನೀಡುವುದು ರಾಜ್ಯಸರ್ಕಾರದ ಬಾಧ್ಯತೆ ಎಂದು ಸ್ಪಷ್ಟಪಡಿಸಿದೆ.
9
+ ಈ ಹಿನ್ನೆಲೆಯಲ್ಲಿ ಮತ್ತೊಮೆ ವಿವಾದ ಮುನ್ನೆಲೆಗೆ ಬಂದಿದೆ. ಎಡಗೈ ಸಮುದಾಯದ ಮುಖಂಡರೂ ಆಗಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ, ಅಬಕಾರಿ ಸಚಿವ ಆರ್‌.ಬಿ.ತಿಮಾಪುರ್‌, ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯಸಭೆಯ ಮಾಜಿ ಸದಸ್ಯ ಎಲ್‌.ಹನುಮಂತಯ್ಯ, ಶಾಸಕರಾದ ಶ್ರೀನಿವಾಸ್‌‍, ಬಸವಂತಪ್ಪ, ಡಾ.ತಿಮಯ್ಯ, ಮಾಜಿ ಸಂಸದ ಶಿವಣ್ಣ ಸೇರಿದಂತೆ ಹಲವು ಪ್ರಮುಖ ಮುಖಂಡರ ಜೊತೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಿದರು. ಸಂಪುಟದಲ್ಲಿ ಚರ್ಚೆ ಮಾಡಿ ಒಳಮೀಸಲಾತಿ ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
eesanje/url_46_31_7.txt ADDED
@@ -0,0 +1,8 @@
 
 
 
 
 
 
 
 
 
1
+ ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ
2
+
3
+ ಬೆಂಗಳೂರು, ಆ.28-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ನಾಳೆಯಿಂದ ರಾಜ್ಯದ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಹಗುರ ಮಳೆ ಬಿದ್ದಿದೆ.
4
+ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಮೇಲೆ ಯಾವುದೇ ನೇರ ಪರಿಣಾಮ ಉಂಟಾಗುವುದಿಲ್ಲ. ಇದರ ಪ್ರಭಾವದಿಂದ ಮೋಡ ಹೆಚ್ಚಾಗಲಿದ್ದು, ಆಗಸ್ಟ್‌ ತಿಂಗಳ ಅಂತ್ಯದವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಬಲವಾದ ಮೇಲೈ ಗಾಳಿ ಬೀಸಲಿದೆ. ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
5
+ ಕೇರಳ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಅರಬ್ಬೀ ಸಮುದ್ರದಲ್ಲಿ ಸಮುದ್ರದ ಮೇಲುಬ್ಬರ(ಟ್ರಫ್‌) ಉಂಟಾಗಿದೆ. ಅಲ್ಲದೆ, ಗುಜರಾತ್‌ ಕರಾವಳಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಎರಡೂ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ವಿರಳ.
6
+ ವಾತಾವರಣದಲ್ಲಿ ಉಂಟಾಗಿರುವ ಈ ರೀತಿಯ ಬದಲಾವಣೆಯಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಆದರೆ, ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದಾಗಿದೆ ಎಂದು ತಜ್ಞರು ಹೇಳಿದ್ದಾರೆ.
7
+ ಮಲೆನಾಡು ಭಾಗದ ಕೆಲವೆಡೆ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಿಂಗನಮಕ್ಕಿ ಜಲಾಶಯದಿಂದ 39 ಸಾವಿರ ಕ್ಯುಸೆಕ್‌್ಸಗೂ ಹೆಚ್ಚು ನೀರನ್ನು ಶರಾವತಿ ನದಿಗೆ ಬಿಡಲಾಗುತ್ತಿದೆ. ಒಳಹರಿವು 22 ಸಾವಿರ ಕ್ಯುಸೆಕ್‌್ಸನಷ್ಟಿದೆ. 151.75 ಟಿಎಂಸಿ ಅಡಿ ಸಾಮರ್ಥ್ಯದ ಲಿಂಗನಮಕ್ಕಿ ಜಲಾಶಯದಲ್ಲಿ ಪ್ರಸ್ತುತ 145.75 ಟಿಎಂಸಿ ನೀರಿದೆ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಸಾಧ್ಯತೆಗಳಿವೆ.
8
+ ಅದೇ ರೀತಿ ಸೂಪ ಜಲಾಶಯವು ಶೇ.89 ರಷ್ಟು ಭರ್ತಿಯಾಗಿದ್ದು, ಕಾಳಿನದಿಗೆ 8 ಸಾವಿರ ಕ್ಯುಸೆಕ್್ಸಗೂ ಹೆಚ್ಚಿನ ನೀರು ಬಿಡಲಾಗುತ್ತಿದೆ. 23 ಸಾವಿರ ಕ್ಯುಸೆಕ್್ಸಗೂ ಹೆಚ್ಚಿನ ಒಳಹರಿವು ಇದೆ. ಜಲಾನಯನ ಭಾಗದಲ್ಲಿ ಮಳೆ ಹೆಚ್ಚಾಗಿರುವುದರಿಂದ ಭರ್ತಿಯಾಗುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.
eesanje/url_46_31_8.txt ADDED
@@ -0,0 +1,8 @@
 
 
 
 
 
 
 
 
 
1
+ ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ ನೀಡಲು ಸೂಚಿಸಿದ್ದ ಪ್ರಭಾವಿ ಸಚಿವ ಯಾರು..?
2
+
3
+ ಬೆಂಗಳೂರು,ಆ.28-ಪ್ರಭಾವಿ ಸಚಿವರ ಸೂಚನೆ ಮೇರೆಗೆ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ರಾಜಾತಿಥ್ಯ ನೀಡಿದ್ದಾರೆಂದು ತಿಳಿದುಬಂದಿದೆ. ಈ ಪ್ರಭಾವಿ ಸಚಿವರು ದರ್ಶನ್ನನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಜೈಲಿನ ಅಧಿಕಾರಿಗಳಿಗೇ ಮೌಖಿಕವಾಗಿ ತಿಳಿಸಿದ್ದರೆಂದು ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್ಗೆ ಹೆಚ್ಚಿನ ಸವಲತ್ತುಗಳನ್ನು ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ನೀಡಿರುವುದು ಇದೀಗ ಬಹಿರಂಗಗೊಂಡಿದೆ.
4
+ ಜೈಲಿನ ಒಳಗಡೆ ಖೈದಿಗಳಿಗೆ ಹಾಗೂ ವಿಚಾರಣಾಧೀನ ಖೈದಿಗಳಿಗೆ ಯಾವುದೇ ವಸ್ತು ನೀಡಬೇಕಾದರೂ ಜೈಲಿನ ಉನ್ನತ ಅಧಿಕಾರಿಗಳ ಅನುಮತಿ ಬೇಕು. ಚೇರು, ಟಿಪಾಯಿ, ಹಾಸಿಗೆ, ಮಂಚ ಈ ರೀತಿಯ ಯಾವುದೇ ವಸ್ತುಗಳನ್ನು ನೀಡಬೇಕಾದರೂ ಅನುಮತಿ ಅಗತ್ಯ. ವೈದ್ಯರು ಸೂಚಿಸಿದರೆ ಮಾತ್ರ ಅವುಗಳನ್ನು ಕೊಡಬೇಕಾಗುತ್ತದೆ. ಇಲ್ಲದಿದ್ದರೆ ಮಾರ್ಗಸೂಚಿ ಪ್ರಕಾರವೇ ವಿಚಾರಣಾಧೀನ ಕೈದಿಗಳಿಗೆ ಸೌಲಭ್ಯ ಒದಗಿಸಬೇಕು.
5
+ ದರ್ಶನ್ಗೆ ರಾಜಾತಿಥ್ಯ ನೀಡಿದ ಫೋಟೋ ವೈರಲ್ಲಾಗುತ್ತಿದ್ದಂತೆ ಈಗಾಗಲೇ ಜೈಲಿನ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ 9 ಮಂದಿಯ ತಲೆದಂಡವೂ ಆಗಿದೆ.
6
+ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತನಿಖೆ ನಡೆಸಿ ನಟ ದರ್ಶನ್ನನ್ನು ಬಂಧಿಸಿದ ಸಂದರ್ಭದಲ್ಲೇ ಈ ಪ್ರಭಾವಿ ಸಚಿವರು ಈ ಪ್ರಕರಣದಿಂದ ದರ್ಶನ್ನನ್ನು ಪಾರು ಮಾಡಲು ಇನ್ನಿಲ್ಲದ ಪ್ರಯತ್ನ ಮಾಡಿದ್ದರು.
7
+ ಮುಖ್ಯಮಂತ್ರಿ, ಗೃಹಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈ ಸಚಿವರು ಪ್ರಕರಣದಿಂದ ದರ್ಶನ್ ಅವರನ್ನು ಕೈಬಿಡುವಂತೆ ಒತ್ತಡ ಹಾಕಿದ್ದರು. ಕೊನೆಗೆ ಈ ಸಚಿವರು ಮುಖ್ಯಮಂತ್ರಿ ಹಾಗೂ ಗೃಹಸಚಿವರ ಮನೆಗೆ ಹೋಗಿ ಪರಿ ಪರಿಯಾಗಿ ಬೇಡಿಕೊಂಡಿದ್ದರು. ಆದರೆ ಅವರಿಗೆ ಸಿಎಂ ಹಾಗೂ ಗೃಹಸಚಿವರು ಬುದ್ದಿವಾದ ಹೇಳಿ ಕಳುಹಿಸಿದ್ದರು.
8
+ ತನ್ನ ಹಠ ಬಿಡದ ಸಚಿವರು ಜೈಲು ಅಧಿಕಾರಿಗಳಿಗೆ ಒತ್ತಡ ಹಾಕಿ ದರ್ಶನ್ಗೆ ರಾಜಾತಿಥ್ಯ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಈ ಪ್ರಕರಣ ಬೆಳಕಿಗೆ ಬಂದ ನಂತರ ಇದೀಗ ಈ ಸಚಿವರು ಪೇಚಿಗೆ ಸಿಲುಕಿದ್ದಾರೆ.
eesanje/url_46_31_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಜಮೀನು ಮಂಜೂರಾಗಿರುವ ಕುರಿತು ತನಿಖೆಗೆ ಸಿದ್ಧ : ಪರಮೇಶ್ವರ್
2
+
3
+ ಬೆಂಗಳೂರು,ಆ.28-ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ರಸ್ಟಿಯಾಗಿರುವ ಸಂಸ್ಥೆಗೆ ದೇವನಹಳ್ಳಿ ಬಳಿ ಜಮೀನು ಮಂಜೂರು ಮಾಡಿರುವ ಪ್ರಕರಣದಲ್ಲಿ ರಾಜಕೀಯ ಪ್ರಭಾವಗಳಿದ್ದರೆ ಅದನ್ನು ರಾಜ್ಯಪಾಲರು ಪರಿಶೀಲನೆ ನಡೆಸಲಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸರ್ಕಾರಗಳಿದ್ದರೂ ಆರೋಪ ಬರುವುದು ಸಹಜ. ಬಿಜೆಪಿ ಸರ್ಕಾರಗಳ ಮೇಲೂ ಆರೋಪ ಬಂದಿವೆ, ಕೇಂದ್ರ ಸರ್ಕಾರದ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳಿವೆ. ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಸೇರಿದ ಟ್ರಸ್ಟ್ನ ಸಂಸ್ಥೆಗೆ ಜಮೀನು ನೀಡಿರುವ ಬಗ್ಗೆ ಚರ್ಚೆಗಳಾಗುತ್ತಿವೆ.
5
+ ಆರೋಪಗಳು ನಿರಾಧಾರ ಎಂದು ಹೇಳಿದರು. ಆರೋಪಗಳು ಕೇಳಿಬರುವುದು ಸಾಮಾನ್ಯ. ಅದು ಸುಳ್ಳು ಎಂದು ಸಾಭೀತುಪಡಿಸುವುದು ನಮ ಜವಾಬ್ದಾರಿ.ನಾವು ಅದನ್ನು ಯಶಸ್ವಿಯಾಗಿ ಮಾಡುತ್ತೇವೆ. ರಾಜ್ಯಪಾಲರಿಗೆ ಈ ಕುರಿತು ದೂರು ನೀಡಿರುವುದನ್ನು ಪರಿಶೀಲನೆ ಮಾಡಲಿ, ಪ್ರಭಾವ ಬಳಕೆಯಾಗಿದ್ದರೆ ಅದನ್ನು ತನಿಖೆ ಮಾಡಲು ಯಾರ ಅಭ್ಯಂತರವೂ ಇಲ್ಲ ಎಂದರು.
6
+ ಉದ್ಯಮ ಆರಂಭಿಸುತ್ತೇವೆ ಎಂದು ಯಾರೇ ಅರ್ಜಿ ಸಲ್ಲಿಸಿದರೂ ಅವರಿಗೆ ಜಮೀನು ಮಂಜೂರು ಮಾಡುವುದು ಸಾಮಾನ್ಯ ಪ್ರಕ್ರಿಯೆ. ಅದೇ ರೀತಿ ಶ್ರೀ ಸಿದ್ದಾರ್ಥ ಟ್ರಸ್ಟ್ಗೂ ಜಮೀನು ನೀಡಲಾಗಿದೆ. ಅದಕ್ಕೆ ಪ್ರತಿಯಾಗಿ ಮಾರ್ಗಸೂಚಿ ದರವನ್ನು ಪಡೆಯಲಾಗುವುದು ಎಂದು ಹೇಳಿದರು.
7
+ ನಾಯಕತ್ವ ಬದಲಾವಣೆ :ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಣಯದ ವಿಚಾರಣೆ ನಾಳೆ ಹೈಕೋರ್ಟ್ನಲ್ಲಿ ನಡೆಯಲಿದ್ದು, ಒಂದು ವೇಳೆ ವ್ಯತಿರಿಕ್ತ ತೀರ್ಪು ಬಂದರೆ ನಾಯಕತ್ವ ಬದಲಾವಣೆಯಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಸದ್ಯಕ್ಕೆ ಆ ರೀತಿಯ ಚರ್ಚೆಗಳಿಲ್ಲ. ಮೊದಲು ನ್ಯಾಯಾಲಯದ ತೀರ್ಪು ಬರಲಿ ಎಂದು ಹೇಳಿದರು.
8
+ ಇತ್ತೀಚೆಗೆ ತಾವು ದೆಹಲಿಗೆ ತೆರಳಿದಾಗ ಹೈಕಮಾಂಡ್ ನಾಯಕರು ತಮೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ಗಾಂಧಿ ಕೂಡ ಸಮಾಲೋಚನೆ ನಡೆಸಿದ್ದಾರೆ. ಅವರು ಏನು ಹೇಳಬೇಕೋ, ಅದನ್ನು ಹೇಳಿದ್ದಾರೆ. ಅದನ್ನೆಲ್ಲಾ ಬಹಿರಂಗವಾಗಿ ತಿಳಿಸಲು ಸಾಧ್ಯವಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಹಾಗೆಂದ ಮಾತ್ರಕ್ಕೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಅಭಪ್ರಾಯ ತಿಳಿಸಲು ಬಯಸುವುದಿಲ್ಲ ಎಂದು ಹೇಳಿದರು.
9
+ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಹಂತಹಂತವಾದ ಹೋರಾಟಗಳನ್ನು ನಡೆಸಲಿದೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಇದೇ 31 ರಂದು ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಜೊತೆಯಾಗಿ ರಾಜಭವನ ಚಲೋ ನಡೆಸಲಿದ್ದೇವೆ. ಅನಂತರ ರಾಷ್ಟ್ರಪತಿಯವರನ್ನೂ ಭೇಟಿ ಮಾಡಲಾಗುವುದು ಎಂದು ಹೇಳಿದರು.
10
+ ಬಿಜೆಪಿಯವರು ರಾಷ್ಟ್ರಮಟ್ಟದಲ್ಲಿ ಈ ಕುರಿತು ಹೋರಾಟ ರೂಪಿಸಿದರೆ ಕಾಂಗ್ರೆಸ್ ಕೂಡ ಈ ರೀತಿ ಯೋಚಿಸಲಿದೆ. ನಮ ಪಕ್ಷ ಏಕಾಂಗಿಯಾಗಿ ಹೋರಾಟ ನಡೆಸಬೇಕೇ ಅಥವಾ ಇಂಡಿಯಾ ಮೈತ್ರಿಕೂಟದ ಜೊತೆಗೆ ಪ್ರತಿಭಟಿಸಬೇಕೆ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು.
11
+ 11 ಮಸೂದೆಗಳಿಗೆ ಸಹಮತ ವ್ಯಕ್ತಪಡಿಸದೆ ರಾಜ್ಯಪಾಲರು ವಾಪಸ್ ಕಳುಹಿಸಿರುವುದನ್ನು ಪುನರ್ ಪರಿಶೀಲಿಸಲಾಗುತ್ತದೆ. ಅಗತ್ಯ ಸ್ಪಷ್ಟನೆಗಳನ್ನು ನೀಡಿ ಮತ್ತೊಮೆ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಆಗಲೂ ಒಪ್ಪದೇ ಇದ್ದರೆ ರಾಷ್ಟ್ರಪತಿ ಅಂಗಳಕ್ಕೆ ಕೊಂಡೊಯ್ಯುವುದಾಗಿ ತಿಳಿಸಿದರು.
12
+ ನಟ ದರ್ಶನ್ ಅವರ ಸ್ಥಳಾಂತರದ ಬಗ್ಗೆ ಜೈಲಿನ ಪ್ರಾಧಿಕಾರದ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾವು ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ಪರಮೇಶ್ವರ್, ಜಮೀರ್ ಅಹಮದ್ ಖಾನ್ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದರಿಂದ ಅಲ್ಲಿಗೆ ಸ್ಥಳಾಂತರಿಸಲಾಗುತ್ತಿದೆ ಎಂಬ ಪ್ರಶ್ನೆ ಎದುರಾಗುತ್ತಿದ್ದಂತೆ ಒಂದು ವಾರದಿಂದಲೂ ಇದೇ ವಿಚಾರವನ್ನು ಚರ್ಚಿಸಲಾಗುತ್ತಿದೆ, ಬೇರೆ ಸುದ್ದಿಗಳಿಲ್ಲವೇ?, ಬೇರೆ ಯಾವುದಾದರೂ ಪ್ರಶ್ನೆಗಳನ್ನು ಕೇಳಿ ಎಂದು ಜಾರಿಕೊಂಡರು.
eesanje/url_46_320_1.txt ADDED
@@ -0,0 +1,7 @@
 
 
 
 
 
 
 
 
1
+ ಝೀಕಾ ವೈರಸ್ ಗೈಡ್‍ಲೈನ್ಸ್ ಪಾಲಿಸುವಂತೆ ಆರೋಗ್ಯ ಇಲಾಖೆ ಕರೆ
2
+ ಬೆಂಗಳೂರು,ನ.3- ಝೀಕಾ ವೈರಸ್‍ನಿಂದ ಪಾರಾಗಲು ಜನ ಕೆಲ ಗೈಡ್‍ಲೈನ್ಸ್‍ಗಳನ್ನು ಫಾಲೋ ಮಾಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. ವೈರಸ್ ಬಗ್ಗೆ ಸ್ವಲ್ಪ ಯಾಮಾರಿದರೂ ಪ್ರಾಣಕ್ಕೆ ಸಂಚಕಾರ ಎದುರಾಗುವ ಸಾಧ್ಯತೆ ಇರುವುದರಿಂದ ಜನ ರೋಗ ಲಕ್ಷಣ ಕಂಡು ಬಂದ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
3
+ ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಯೇಳುವುದು ಹಾಗೂ ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸೋಂಕಿನ ಲಕ್ಷಣವಾಗಿದ್ದು, ಇಂತಹ ಲಕ್ಷಣಗಳು ಕಾಣಿಸಿಕೊಂಡವರು ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಲಾಗಿದೆ.
4
+ ಝೀಕಾ ವೈರಸ್ ತಡೆಗಟ್ಟಲು ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು ಮತ್ತು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ದರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು ಎಂದು ಸಲಹೆ ನೀಡಲಾಗಿದೆ.
5
+ ಮೂವರು ಮುಖ್ಯನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು
6
+ ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ.
7
+ ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸಂಪರ್ಕ ಮಾಡಲು ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ.
eesanje/url_46_320_10.txt ADDED
@@ -0,0 +1,4 @@
 
 
 
 
 
1
+ ಬಿಜೆಪಿ ಬರ ಅಧ್ಯಯನ ಮಾಡುತ್ತಿರುವ ತಂಡ ನಾಟಕ ಕಂಪನಿ: ಶಿವರಾಜ ತಂಗಡಗಿ
2
+ ಕೊಪ್ಪಳ: ಬಿಜೆಪಿಯವರು ಬರ ಅಧ್ಯಯನ ಮಾಡುತ್ತಿರುವುದು ನಾಟಕ ಕಂಪನಿ, ಅವರು ಮೊದಲು ಕೇಂದ್ರದ ಮೇಲೆ ಒತ್ತಡ ಮಾಡಲಿ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಕೊಪ್ಪಳದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಬಂದಿದೆ. ಬರ ತಂಡ ಬಂದು ಹೋಗಿದೆ. ನಮ್ಮ ರಾಜ್ಯದ ನಾಲ್ಕು ಸಚಿವರು ಇದ್ದಾರೆ.
3
+ ಕೇಂದ್ರದಿಂದ ಸಹಕಾರ ನಮಗೆ ಸಿಗುತ್ತಿಲ್ಲ. ಕೇಂದ್ರ ಸರಕಾರದವರು ನಮ್ಮ ಪರ ಇಲ್ಲ. ನಮ್ಮ ಸಿಎಂ ಪತ್ರ ಬರೆದರೂ ಕೇಂದ್ರ ಸರಕಾರ ಸ್ಪಂದಿಸಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಸಿಎಂ ಸೀಟು ಖಾಲಿ ಇಲ್ಲ. ಹೈಕಮಾಂಡ್‌ ಈ ಕುರಿತು ನಿರ್ಧಾರ ಮಾಡಲಿದೆ, ರಮೇಶ್‌ ಜಾರಕಿಹೊಳಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದರು. ಮರಳು ಮಾಫಿಯಾ ತಡೆಯುತ್ತೇನೆ.‌
4
+ 192 ಕೋಟಿ ರೂಪಾಯಿ ಕುಡಿವ ನೀರು ಯೋಜನೆಯಲ್ಲಿ ಆಗಿರುವ ವ್ಯವಾಹಾರ ತನಿಖೆ ಮಾಡಿಸಲಾಗಿದೆ ಎಂದರು. ದುಬೈಗೆ ಕಾಂಗ್ರೆಸ್ ಶಾಸಕರು ಹೋಗುತ್ತಿರುವುದು ವೈಯಕ್ತಿಕವಾಗಿ ಹೋಗುತ್ತಿದ್ದಾರೆ. ಅವರನ್ನು ಸರಕಾರದಿಂದ ಕಳುಹಿಸುತ್ತಿಲ್ಲ. ರಾಜ್ಯದ ಕಾಂಗ್ರೆಸ್‌ನಲ್ಲಿ ಅತೃಪ್ತಿ ಇಲ್ಲ. ಅತೃಪ್ತಿ ಎಂಬುವುದು ಕೇವಲ ಮಾಧ್ಯಮಗಳಲ್ಲಿ ಮಾತ್ರ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
eesanje/url_46_320_11.txt ADDED
@@ -0,0 +1,9 @@
 
 
 
 
 
 
 
 
 
 
1
+ “ಪಾಪ ಸಿದ್ದರಾಮಯ್ಯನವರನ್ನು ನೋಡಿದರೆ ಅಯ್ಯೋ ಅನ್ನಿಸುತ್ತಿದೆ”
2
+ ಬೆಂಗಳೂರು,ನ.2- ಹಿಂದುಳಿದ ವರ್ಗಗಳ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಪಕ್ಷ ಈ ರೀತಿ ನಡೆಸಿಕೊಳ್ಳುತ್ತಿರುವುದು, ಅವರ ವಿರುದ್ದ ಕಾಂಗ್ರೆಸ್ ಗುಂಪುಗಾರಿಕೆ ನೋಡಿದರೆ ಲೋಕಸಭೆಯ ನಂತರ ಅವರ ಕುರ್ಚಿಗೆ ಕಂಟಕವೆಂದು ತೋರುತ್ತಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.
3
+ ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪಾಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವರ ಸರ್ಕಾರದಲ್ಲೇ ನಡೆಯುತ್ತಿರುವ ಷಡ್ಯಂತ್ರವನ್ನು ನೋಡಿದರೆ ನಮಗೆ ಅಯ್ಯೋ ಅನ್ನಿಸುತ್ತಿದೆ. ಸಿದ್ದರಾಮಯ್ಯನವರು ಹಿಂದಿವಾಲಾ ಸುರ್ಜೆವಾಲಾ ಅವರನ್ನು ಸಮಸ್ಯೆ ಬಗೆಹರಿಸಲು ಕರ್ನಾಟಕಕ್ಕೆ ಸ್ವಾಗತಿಸಿರುವುದು ಅವರ ಅಸಹಾಯಕತೆಯನ್ನು ತೋರುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
4
+ ಮೊದಲು ಇದ್ದ ಎರಡು ಗುಂಪುಗಳು ಈಗ 5 ಆಗಿದ್ದು, ಎಲ್ಲಾ ಗುಂಪಿನ ನಾಯಕರು ಬೇರೆ ಬೇರೆ ರಾಜ್ಯಗಳಲ್ಲಿ ರೆಸಾರ್ಟ್ ಬುಕ್ ಮಾಡಿ ಕಾಯುತ್ತಿರುವಂತೆ ಇದೆ ಎಂದು ಟೀಕಿಸಿದ್ದಾರೆ. ರಾಜ್ಯದ ಜನರಿಗೆ ಇವರ ಅಗ್ರಿಮೆಂಟ್ ಎಷ್ಟು ವರ್ಷಕ್ಕೆ ಎಂದು ಕಾಂಗ್ರೆಸ್ ಪಕ್ಷ ಹಾಗು ಸಿದ್ದರಾಮಯ್ಯನವರು ಸ್ಪಷ್ಟಪಡಿಸಲಿ, ಒಂದು ವರ್ಷವೋ, ಎರಡೋ ! ನಂತರ ಯಾರು? ಈ ಮಂತ್ರಿ ಮಂಡಲ ಒಂದು ವರ್ಷಕ್ಕೋ , ಎರಡೋ ಅಥವಾ ಮೂರೋ! ಈ ಸರ್ಕಾರ ಒಂದು ವರ್ಷಕ್ಕೋ , ಎರಡೂ ಅಥವಾ ಮೂರೋ ಎಂದು ಕುಹುಕವಾಡಿದ್ದಾರೆ.
5
+ ಮಸೂದೆಗೆ ಅಂಗೀಕಾರ ನೀಡದ ರಾಜ್ಯಪಾಲರ ವಿರುದ್ಧ ಸುಪ್ರೀಂಗೆ ದೂರು
6
+ ಕಾಂಗ್ರೆಸ್ ಕಚೇರಿಯಲ್ಲಿ 3 ಗಂಟೆ ನಡೆದ ರಾಜಿಸಂಧಾನ ವಿಫಲವಾಗಿರುವುದರ ಹಿಂದೆ ಯಾರು ಕೊಟ್ಟಿರುವ ಉಡುಗೊರೆಗಳು ಕಾರಣ ಎಂದು ಕಾಂಗ್ರೆಸ್ ಕಚೇರಿಯ ಗೋಡೆಗಳೂ ಕೂಗುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
7
+ ಚುನಾವಣೆಯ ಸಂಧರ್ಭದಲ್ಲಿ ಪಿಎಸ್‍ಐ ಸ್ಕ್ಯಾಮ್ ಬಗ್ಗೆ ಬಾಯಿ ಬಡಿದುಕೊಂಡಿದ್ದ ಕಾಂಗ್ರೆಸ್ ನಾಯಕರು, ಈಗ ಅವರ ತನಿಖೆ ಎಲ್ಲಿಗೆ ಬಂದಿದೆ ಎಂದು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರು ಬೇಷರತ್ ಕ್ಷಮೆಯಾಚಿಸಬೇಕು. ಎಷ್ಟು ಜನರನ್ನು ಬಂಧಿಸಲಾಗಿದೆ? ಇವರ ತನಿಖೆಯಿಂದ ಯಾರ ಹೆಸರು ಈ ಹಗರಣದಲ್ಲಿ ಬೆಳಕಿಗೆ ಬಂದಿದೆ? ಇವೆಲ್ಲವನ್ನೂ ಬಹಿರಂಗಪಡಿಸಲಿ. ದಿನಕ್ಕೊಂದು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ನಾಯಕರು ಈಗ ಎಲ್ಲಿ ತಪ್ಪಿಸಿಕೊಂಡು ತಿರುಗಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
8
+ ಮತ್ತೊಂದು ಟ್ವೀಟ್‍ನಲ್ಲಿ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ರಾಜ್ಯದ 200ಕ್ಕೂ ಅಧಿಕ ತಾಲ್ಲೂಕುಗಳು ಬರದ ಬೇಗೆಯಲ್ಲಿ ನಲುಗುತ್ತಿದೆ, ಬರ ಪರಿಹಾರ ಕೊಡಿ ಅಂದರೆ ಸರಕಾರದಲ್ಲಿ ಹಣ ಇಲ್ಲ. ರಾಜ್ಯ ವಿದ್ಯುಚ್ಛಕ್ತಿ ಕೊರತೆಯಿಂದ ನರಳುತ್ತಿದೆ , ವಿದ್ಯುತ್ ಕೊ���ಡುಕೊಳ್ಳಲು ಸರಕಾರದಲ್ಲಿ ಹಣ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
9
+ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರೆಸಿ ಎಂದರೆ, ಅಭಿವೃದ್ಧಿ ಕಾಮಗಾರಿಗೆ ಸರಕಾರದಲ್ಲಿ ಹಣ ಇಲ್ಲ. ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಹಾಲು ಮೊಟ್ಟೆ ಕಡಿತ, ಯಾಕೆಂದರೆ ಮೊಟ್ಟೆ ನೀಡಲು ಸರಕಾರದಲ್ಲಿ ಹಣವಿಲ್ಲ ಎಂದು ಕಿಡಿಕಾರಿದ್ದಾರೆ. ಹೇಳುವುದಕ್ಕೆ ಸಮಾಜವಾದಿ, ಆದರೆ ಸ್ವ – ಮಜಾವಾದಿ !! ಎಂದು ಲೇವಡಿ ಮಾಡಿದ್ದಾರೆ.
eesanje/url_46_320_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ : ಬಿಎಸ್‌ವೈ
2
+ ಬೆಂಗಳೂರು,ನ.2- ಎಐಸಿಸಿ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಅನಗತ್ಯವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇವರ ಆಂತರಿಕ ಕಚ್ಚಾಟದಿಂದಾಗಿ ಅಭಿವೃದ್ದಿ ಕಾಮಗಾರಿಗಳು ನಿಂತುಹೋಗಿವೆ ಎಂದು ಆರೋಪಿಸಿದರು.
3
+ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸುರ್ಜೆವಾಲ ಮತ್ತು ಕೆ.ಸಿ.ವೇಣುಗೋಪಾಲ್ ಕರ್ನಾಟಕಕ್ಕೆ ಏಕಾಏಕಿ ಬಂದಿದ್ದು ಏಕೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಚಿವರು ಮತ್ತು ಶಾಸಕರು ನಾಯಿನರಿಗಳ ತರ ಕಿತ್ತಾಡಿಕೊಳುತ್ತಿದ್ದಾರೆ. ಉಸ್ತುವಾರಿಗಳು ರಾಜ್ಯಕ್ಕೆ ಬರುವುದು ವಸೂಲಿಗೆ ಎಂಬುದು ಬಾಯ್ಬಿಟ್ಟು ಹೇಳಬೇಕೆ ಎಂದು ಪ್ರಶ್ನೆ ಮಾಡಿದರು.
4
+ ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದು ಆರು ತಿಂಗಳಾಗಿದೆ. ಆದರೆ ಸರ್ಕಾರ ಮಾತ್ರ ಗಾಳಿಯಿಲ್ಲದೇ ಮುಂದೆ ಹೋಗುತ್ತಿಲ್ಲ. ತಮ್ಮ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಚಿತ್ರ ಪರಿಸ್ಥಿತಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು. ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ಸ್ಥಗಿತವಾಗಿವೆ.
5
+ ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡಿದ್ದಾರೆ. ಬರ ಪೀಡಿತ ಪ್ರದೇಶಕ್ಕೆ ಸಿಎಂ ಸೇರಿ ಒಬ್ಬ ಮಂತ್ರಿ ಕೂಡ ಹೋಗಿಲ್ಲ. ಸರ್ಕಾರ ಯಾವ ರೀತಿ ದಿವಾಳಿ ಯಾಗಿದೆ ಎಂದರೆ ಶಾಸಕರ ಅನುದಾನ 2 ಕೋಟಿ ಬದಲು 50 ಲಕ್ಷ ಮಾತ್ರ ಬಿಡುಗಡೆ ಮಾಡಿದ್ದಾರೆ. ಅನುದಾನವನ್ನು ಸಹ ಸರಿಯಾಗಿ ಬಿಡುಗಡೆ ಮಾಡಿಲ್ಲ ಎಂದು ದೂರಿದರು.
6
+ ತಾಂಡಾ, ಬೋವಿ, ಅಂಬೇಡ್ಕರ್ ನಿಗಮಗಳಿಗೆ ಒಂದು ಪೈಸೆಯೂ ಬಿಡುಗಡೆ ಮಾಡಿಲ್ಲ. ರೈತ ಬರಗಾಲದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಪಂಪ್‍ಸೆಟ್‍ಗೆ ಉಚಿತ ವಿದ್ಯುತ್ ನೀಡಲಾಗುತಿತ್ತು. ಮುಂದೆ ವಿದ್ಯುತ್ ಶುಲ್ಕ ರೈತನೇ ಭರಿಸುವ ಕೆಲಸ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಸಿದ್ದರಾಮಯ್ಯನವರು ಅನಗತ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವ ಚಾಳಿ ಇಟ್ಟುಕೊಂಡಿದ್ದಾರೆ. ಅವರಿಗೆ ಮಾಹಿತಿ ಕೊರತೆ ಇರಬಹುದು. ಕೇಂದ್ರ ಸರ್ಕಾರ ಅಭಿವೃದ್ಧಿಗೆ ಸಾಕಷ್ಟು ಹಣ ಬಿಡುಗಡೆ ಮಾಡಿದೆ ಎಂದು ಸಮರ್ಥಿಸಿಕೊಂಡರು.
7
+ ಎನ್‍ಡಿಆರ್‍ಎಫ್‍ನಿಂದ 12,784 ಕೋಟಿ, ಎಸ್‍ಡಿಆರ್‍ಎಫ್‍ನಿಂದಲೂ ಹಣ ಬಿಡುಗಡೆಯಾಗಿದೆ. 5.23 ಲಕ್ಷ ಕೋಟಿ ಕೇಂದ್ರದ ಯೋಜನೆ ಹೊರತುಪಡಿಸಿ ಕೊಟ್ಟಿದ್ದಾರೆ. 37 ಲಕ್ಷ ಕೋಟಿ ರಸ್ತೆ ಕಾಮಗಾರಿಗೆ ನೀಡಲಾಗಿದೆ. ಹೆದ್ದಾರಿ ಕಾಮಗಾರಿಗೆ 47,200 ಕೋಟಿ, ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ವೇ ಜೊತೆಗೆ ಚೆನೈ-ಬೆಂಗಳೂರು ಎಕ್ಸ್ಪ್ರೆಸ್ ವೇ ನಿರ್ಮಾಣವಾಗುತ್ತಿದೆ ಎಂದರು.
8
+ ಕಿಸಾನ್ ಯೋಜನೆಗೆ ನಮ್ಮ ಸರ್ಕಾರ 4 ಸಾವಿರ ಕೊಡುತ್ತಿತ್ತು. ಈಗ ಸಿದ್ದರಾಮಯ್ಯನವರು ಅದನ್ನೂ ನಿಲ್ಲಿಸಿದ್ದಾರೆ. ಭದ್ರಾ ಯೋಜನೆಗೆ ನೀಡಲಾಗಿದೆ. ರಾಜ್ಯದ ರೈಲು ಯೋಜನೆಗೆ 800 ಕೋಟಿ ನೀಡಿದರೆ ಈಗ 3,700 ಕೋಟಿ ಕೊಡಲಾಗುತ್ತಿದೆ. ಬೆಂಗಳೂರು ಉಪರೈಲು ಯೋಜನೆಗೆ 400 ಕೋಟಿ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ಎರಡು, ಮೂರನೇ ಯೋಜನೆಗೆ ಹಣ ಬಿಡುಗಡೆ ಮಾಡಿದೆ. ಮೋದಿ ಅವರು ರಾಜಕೀಯ ಮಾಡದೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
9
+ ನಾವು ಆರು ತಿಂಗಳು ಅವಕಾಶ ನೀಡಿದೆವು. ಆದರೆ ಆರು ತಿಂಗಳಲ್ಲಿ ಯಾವುದೇ ಸುಧಾರಣೆ ಆಗಲಿಲ್ಲ. ಹಾಗಾಗಿ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗಲಿದೆ. ಹೊಸ ಪಂಪ್‍ಸೆಟ್‍ಗೆ ರೈತ ಎರಡು ಲಕ್ಷ ಕೊಡಬೇಕಿದೆ ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ರಘು, ಎಸ್.ಆರ್.ವಿಶ್ವನಾಥ್, ವಿಧಾನಪರಿಷತ್ ಸದಸ್ಯ ರವಿಕುಮಾರ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.
eesanje/url_46_320_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕಾಂತರಾಜು ವರದಿ ತಿರಸ್ಕಾರಕ್ಕೆ ಒತ್ತಾಯ
2
+ ಬೆಂಗಳೂರು, ನ.3- ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಅನುಷ್ಠಾನಗೊಳಿಸಬಾರದು. ಒಂದು ವೇಳೆ ಸಮೀಕ್ಷೆಯ ಅಗತ್ಯವಿದ್ದರೆ ಮತ್ತೊಮ್ಮೆ ವೈಜ್ಞಾನಿಕ ಸಮೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವನ್ನು ಒಕ್ಕಲಿಗರ ಸಮುದಾಯ ಮಾಡಿದೆ.
3
+ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಚಿಂತನ-ಮಂಥನ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಸುದೀರ್ಘ ಚರ್ಚೆ ನಡೆಸಿ ಕಾಂತರಾಜು ವರದಿಯನ್ನು ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ತೀರ್ಮಾನಿಸಲಾಗಿದೆ.ವರದಿಯೂ ಅವೈಜ್ಞಾನಿಕವಾಗಿದ್ದು, ದೋಷ ಪೂರಿತವಾಗಿದೆ. ವರದಿ ಅನುಷ್ಠಾನವಾದರೆ ಕೇವಲ ಒಕ್ಕಲಿಗ ಸಮುದಾಯ ಅಷ್ಟೇ ಅಲ್ಲ, ಇತರೆ ಸಮುದಾಯಗಳಿಗೂ ತೊಂದರೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
4
+ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂಥನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಸಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಚಿಂತನ-ಮಂಥನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
5
+ ಅಲ್ಲದೆ, ಮೀಸಲಾತಿಯಿಂದ ಸಮುದಾಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂಘ- ಸಂಸ್ಥೆಗಳ ಜತೆಗೂಡಿ ಪಕ್ಷಾತೀತವಾಗಿ ಒಟ್ಟಾಗಿ ಒಕ್ಕಲಿಗ ಸಮುದಾಯದ ಹಿತರಕ್ಷಣೆಗೆ ಶ್ರಮಿಸಲು ನಿರ್ಧರಿಸಲಾಗಿದೆ.
6
+ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಚುಂಬಿಸಿ ಪರಾರಿಯಾದ ಕಿಡಿಗೇಡಿಗಳು
7
+ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ನಿರ್ಮಲಾನಂಥನಾಥ ಸ್ವಾಮೀಜಿ ಅವರು ಕಾಂತರಾಜು ಅಧ್ಯಕ್ಷರಾಗಿದ್ದ ಅವಯಲ್ಲಿ ತಯಾರಿಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯೂ ದೋಷಪೂರಿತವಾಗಿದೆ. ಈ ವರದಿಯನ್ನು ಸರ್ಕಾರ ಸ್ವೀಕರಿಸಬಾರದು, ಸ್ವೀಕರಿಸಿದರೂ ಅನುಷ್ಠಾನಗೊಳಿಸಬಾರದು. 8 ವರ್ಷಗಳ ಹಿಂದೆ ತಯಾರಿಸಿದ ವರದಿ ಅವೈಜ್ಞಾನಿಕವಾಗಿದೆ. ಒಂದು ವೇಳೆ ವರದಿ ಅನುಷ್ಠಾನಗೊಳಿಸಬೇಕೆಂದಾದರೆ, ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ವರದಿ ಪಡೆಯಲಿ. ಅಲ್ಲದೆ, ಮೀಸಲಾತಿ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿಲುವು ತಳೆಯಬೇಕು. ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸೌಜನ್ಯವಾಗಿ ಮನವಿ ಮಾಡಲು ತೀರ್ಮಾನಿಸಲಾಗಿದೆ ಎಂದರು.
8
+ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಮಾತನಾಡಿ, ಕಾಂತರಾಜು ವರದಿ ಅವೈಜ್ಞಾನಿಕವಾಗಿದ್ದು, ಅದನ್ನು ಯಾವುದೇ ಕಾರಣಕ್ಕೂ ಒಪ್ಪಬಾರದು. ಒಕ್ಕಲಿಗ ಸಮುದಾಯಕ್ಕಿರುವ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.16ಕ್ಕೆ ಹೆಚ್ಚಿಸಬೇಕು. ಹಿಂದಿನ ಸರ್ಕಾರದ ಅವಯಲ್ಲಿ ಪರಿಷ್ಕರಿಸಲಾಗಿದ್ದ ಮೀಸಲಾತಿ ವಿ��ಾರದಲ್ಲಿ ಸ್ಪಷ್ಟ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡು ನಮ್ಮ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಹೇಳಿದರು.
9
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಮಾಜಿ ಸಚಿವರಾದ ಎಂ.ಕೃಷ್ಣಪ್ಪ, ಎಸ್.ಟಿ.ಸೋಮಶೇಖರ್, ಆರಗಜ್ಞಾನೇಂದ್ರ, ಶಾಸಕರಾದ ರವಿಕುಮಾರ( ಗಣಿಗ), ಶರತ್ ಬಚ್ಚೇಗೌಡ, ಡಾ.ರಂಗನಾಥ, ಡಾ.ಮಂತರ್ ಗೌಡ, ಹೆಚ್.ಟಿ.ಮಂಜು, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಅ.ದೇವೇಗೌಡ, ದಿನೇಶ್ ಗೂಳಿಗೌಡ, ವೈ.ಎ.ನಾರಾಯಣಸ್ವಾಮಿ, ಕೆ.ಗೋವಿಂದರಾಜು,
10
+ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಗೌರವಾಧ್ಯಕ್ಷ ಬಿ.ಕೆಂಚಪ್ಪಗೌಡರು, ಉಪಾಧ್ಯಕ್ಷರಾದ ಸಿ.ದೇವರಾಜು, ಎಲ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಹೆಚ್.ಸಿ.ಜಯಮುತ್ತು, ಸಹಾಯಕ ಕಾರ್ಯದರ್ಶಿ ವೆಂಕಟರಾಮೇಗೌಡರು, ಖಜಾಂಚಿ ಸಿ.ಎಂ.ಮಾರೇಗೌಡರು ಸೇರಿದಂತೆ ಸಂಘದ ನಿರ್ದೇಶಕರು, ಗಣ್ಯರು ಚಿಂತನ-ಮಂಥನ ಸಭೆಯಲ್ಲಿ ಭಾಗವಹಿಸಿದ್ದರು.
eesanje/url_46_320_3.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಶಾಸಕರಿಗೆ 50 ಕೋಟಿ ಆಫರ್ : ಸಿಒಡಿ ಆಂತರಿಕ ವಿಚಾರಣೆ
2
+ ಮೈಸೂರು, ನ.2- ಕಾಂಗ್ರೆಸ್‍ನ ನಾಲ್ವರು ಶಾಸಕರಿಗೆ ತಲಾ ಐವತ್ತು ಕೋಟಿ ಆಮಿಷವೊಡ್ಡಿ, ಸರ್ಕಾರವನ್ನು ಪತನಗೊಳಿಸಲು ನಡೆಸಿದ ಆಪರೇಷನ್ ಕಮಲ ಪ್ರಯತ್ನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದು. ಸಿಒಡಿಯಿಂದ ಆಂತರಿಕ ವಿಚಾರಣೆಯಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.
3
+ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್‍ನ 11ಶಾಸಕರನ್ನು ಸಂಪರ್ಕಿಸುವ ಯತ್ನ ನಡೆಸಿದ್ದಾರೆ. ಆ ಪಟ್ಟಿಸಿಒಡಿ ಕೈನಲ್ಲಿದೆ. ಅದರಲ್ಲಿ ನಾಲ್ವರನ್ನು ಬಿಜೆಪಿಯವರು ಭೇಟಿ ಮಾಡಿ ಮಾತುಕತೆ ನಡೆಸಿರುವ ಮಾಹಿತಿಯನ್ನು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಬಹಿರಂಗ ಪಡಿಸಿದ್ದಾರೆ. ಆ ಕುರಿತು ಮುಖ್ಯಮಂತ್ರಿಯವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದರು.
4
+ ಬಿಜೆಪಿಯವರು ಏನೇ ಪ್ರಯತ್ನ ಮಾಡಿದರು ಐದು ವರ್ಷ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ. ಕಳೆದ ಒಂಬತ್ತುವರೆ ವರ್ಷದಲ್ಲಿ 10 ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರಗಳನ್ನು ಬೀಳಿಸಿದೆ. ರಾಜ್ಯದಲ್ಲೂ ಆ ಪ್ರಯತ್ನಗಳು ನಡೆದಿವೆ. ಶಾಸಕರ ಪಕ್ಷಾಂತರದ ಆಪರೇಷನ್ ಫಲಿತಾಂಶದ ಬಗ್ಗೆ 10 ದಿನ ಕಾದು ನೋಡಿ. ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎಂದು ಗೋತ್ತಾಗಲಿದೆ. ನಾವಂತೂ ಬೇರೆ ಪಕ್ಷಗಳ ಶಾಸಕರನ್ನು ಸೆಳೆಯುವುದಿಲ್ಲ. ಅಲ್ಲಿನ ಪರಿಸ್ಥಿತಿಯಿಂದ ಅಸಮಾಧಾನಗೊಂಡು ಬರುವವರ ಸಂಖ್ಯೆ ಹೆಚ್ಚಿದೆ ಎಂದರು.
5
+ ಬಿಜೆಪಿ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿಯಲ್ಲಿ ಪ್ರಾಮುಖ್ಯತೆ ಕಳೆದುಕೊಂಡು ಜೋಕರ್ ಆಗಿದ್ದಾರೆ. ಆಪರೇಷನ್ ಕಮಲದ ನೇತೃತ್ವ ವಹಿಸಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಬೀಳಿಸಿದ ಅವರನ್ನೇ ಬಿಜೆಪಿಯವರು ಒಂದು ವರ್ಷದಲ್ಲಿ ಸಂಪುಟದಿಂದ ಕಿತ್ತು ಹಾಕಿದರು. ಅದು ಯಾವ ಕಾರಣಕ್ಕೆ ಎಂದು ರಮೇಶ್ ಜಾರಕಿಹೊಳಿಯವರು ಹೇಳಬೇಕು. ಇಂತಹ ನಗೆಪಾಟಿಲಿಗೀಡಾಗುವ ವ್ಯಕ್ತಿಗಳಿಗೆ ನಮ್ಮ ನಾಯಕರು ಪ್ರತಿಕ್ರಿಯಿಸಬಾರದು ಎಂದ ಅವರು, ಮಾಜಿ ಸಚಿವ ಹೆಚ್.ವಿಶ್ವನಾಥ್ ಬಾಂಬೆ ಡೇ ಪುಸ್ತಕ ಬರೆಯುತ್ತಿದ್ದು, ಅದರಲ್ಲಿ ಯಾರು ಕೈನಲ್ಲಿ ಬೀರ್ ಬಾಟಲ್ ಹಿಡಿದುಕೊಂಡಿದ್ದರು. ಏನೇನು ಮಾಡುತ್ತಿದ್ದರು ಎಂದು ಪುಸ್ತಕದಲ್ಲಿ ಬಹಿರಂಗವಾಗಲಿದೆ ಎಂದು ಹೇಳಿದರು.
6
+ ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್
7
+ ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ನಾಲ್ಕುವರೆ ಲಕ್ಷ ಕೋಟಿ ರೂಪಾಯಿ ತೆರಿಗೆ ಆದಾಯ ರವಾನೆಯಾಗುತ್ತಿದೆ. ಅಲ್ಲಿಂದ ವಾಪಾಸ್ ಬರುತ್ತಿರುವುದು 50 ಸಾವಿರ ಕೋಟಿ ರೂಪಾಯಿ ಮಾತ್ರ. ನೀತಿ ಆಯೋಗದ ನಿಯಮದ ಪ್ರಕಾರ ರಾಜ್ಯಗಳಿಗೆ ಶೇ. 42ರಷ್ಟು ತೆರಿಗೆ ಪಾಲು ನೀಡಬೇಕು. ಬಿಜೆಪಿಯವರ ಮೆಹರರ್ಬಾನಿ ಬೇಕಿಲ್ಲ. ನಮ್ಮ ಪ���ಲು ನಮಗೆ ಕೊಡಿ ಎಂದು ಆಗ್ರಹಿಸಿದರು.ಸಂಸದ ಪ್ರತಾಪ್ ಸಿಂಹ್ ಮಹಿಷ ದಸರಾ ಹೆಸರಿನಲ್ಲಿ 15ದಿನ ಗಲಾಟೆ ಮಾಡಿದರು.
8
+ ಬಸ್ ನಿಲ್ದಾಣದ ಮೇಲೆ ಗುಂಬಸ್ ನಿರ್ಮಾಣವಾಗಿದೆ ಎಂದು ಒಂದು ತಿಂಗಳು ಗಲಾಟೆ ನಡೆಸಿದರು. ಹಿಜಾಬ್, ಹಲಾಲ್ ಎಂಬ ಕಿಡಿ ಹೊತ್ತಿಸುವ ಗಲಾಟೆಗಳನ್ನಷ್ಟೆ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಏನು ಚರ್ಚೆ ಮಾಡಿದ್ದಾರೆ ತೋರಿಸಲಿ. ಅವರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹುಣಸೂರು, ಚಾಮುಂಡೇಶ್ವರಿ ಸೇರಿ ಹಲವು ಕ್ಷೇತ್ರಗಲ್ಲಿ ಬರ ಇದೆ. ಇದಕ್ಕೆ ಸ್ಪಂದಿಸಲು ಪ್ರತಾಪ್ ಸಿಂಹರ ಪ್ರಯತ್ನವೇನು. ಕನಿಷ್ಠ ಕೇಂದ್ರ ಸರ್ಕಾರಕ್ಕೆ ಒಂದು ಪತ್ರವನ್ನಾದರೂ ಬರೆದಿದ್ದಾರೆಯೇ ಎಂದು ಪ್ರಶ್ನಿಸಿದರು. ನಾವು ಅವರ ಕಚೇರಿಗೆ ಹೋಗಿ ಕೇಂದ್ರಕ್ಕೆ ಪತ್ರ ಬರೆಸಲು ಯತ್ನಿಸುತ್ತೇವೆ ಎಂದು ಹೇಳಿದರು.
9
+ ಬಿಜೆಪಿಯಲ್ಲಿ ಈವರೆಗೂ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆಯಾಗಿಲ್ಲ. ಕೆಲವು ದಿನ ಅಶ್ವಥ್‍ನಾರಾಯಣ, ಅಶೋಕ್, ಶೋಭಾ ಕರಂದ್ಲಾಜೆ ಹೆಸರುಗಳು ಕೇಳಿ ಬಂದವು. ಬಸವನಗೌಡ ಯತ್ನಾಳ್ ತಲೆಯ ಮೇಲೆ ಏನೇನನ್ನೋ ಸುರಿದುಕೊಂಡರೂ ಪ್ರಯೋಜನವಾಗಲಿಲ್ಲ. ರಾಷ್ಟ್ರೀಯ ಪಕ್ಷ ಎನ್ನುತ್ತಾರೆ. ಈವರೆಗೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗಿಲ್ಲ. ಈ ಬಗ್ಗೆ ಕಾಂಗ್ರೆಸ್‍ನವರು ಮಾತನಾಡುತ್ತಿದ್ದಾರೆಯೇ ಹೊರತು, ಬಿಜೆಪಿಯವರು ಏಕೆ ಮೌನವಾಗಿದ್ದಾರೆ ಎಂದು ಪಶ್ನಿಸಿದರು.
10
+ ಏರ್ಖಾಂಡ್‍ನಲ್ಲಿ ನಾಲ್ಕು ವರ್ಷ ವಿರೋಧ ಪಕ್ಷದ ನಾಯಕನ್ನೇ ನೇಮಕ ಮಾಡಿರಲಿಲ್ಲ. ರಾಜ್ಯದಲ್ಲೂ ಅಂತಹ ನಿರ್ಲಕ್ಷ್ಯವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆಯೇ. ರಾಜ್ಯದಲ್ಲಿ ಈಗಾಗಲೇ ಯಡಿಯೂರಪ್ಪ ಹಾಗೂ ಈಶ್ವರಪ್ಪ ಕತೆ ಮುಗಿಸಿದ್ದಾರೆ. ರಾಜ್ಯ ನಾಯಕತ್ವವನ್ನು ಸಂಪೂರ್ಣ ಮೂಲೆ ಗುಂಪು ಮಾಡಲಾಗಿದೆ ಎಂದು ಹೇಳಿದರು.
11
+ ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಿ ವಿದ್ಯುತ್ ಖರೀದಿಯಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ವಿದ್ಯುತ್ ಖರೀದಿಸುತ್ತಿರುವುದು ಕೇಂದ್ರ ಗ್ರೀಡ್‍ನಿಂದ ಕೇಂದ್ರ ಸಚಿವರು ಕಮಿಷನ್ ನೀಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.
12
+ ರಾಜ್ಯದಲ್ಲಿ 28,471 ಮೇಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮಥ್ರ್ಯವಿದ್ದರೂ, ಹಾಲಿ ಉತ್ಪಾದನೆಯಾಗುತ್ತಿರುವುದು 15 ಸಾವಿರ ಮಾತ್ರ. ಮಳೆ ಕೊರತೆಯಿಂದ ಜಲ ವಿದ್ಯುತ್ ಇಲ್ಲ. ಉಷ್ಣವಿದ್ಯುತ್ ಉತ್ಪಾದನೆಯಲ್ಲೂ ಹಿನ್ನೆಡೆಯಾಗಿದೆ. ಕೇಂದ್ರ ಸರ್ಕಾರ 4415 ಮೇಗಾವ್ಯಾಟ್ ಬದಲು, ಒಂದು ಸಾವಿರ ಮೇಗಾವ್ಯಾಟ್ ಮಾತ್ರ ಪೂರೈಸುತ್ತಿದೆ. ಇನ್ನೂ 3400 ಮೇಗಾವ್ಯಾಟ್ ಬರುತ್ತಿಲ್ಲ. ರಾಜ್ಯಕ್ಕೆ ಪ್ರತಿದಿನ 18 ಸಾವಿರ ಮೇಗಾವ್ಯಾಟ್ ಬೇಡಿಕೆ ಇದೆ. ಕೊರತೆ ಇರುವ ಮೂರು ಸಾವಿರ ಮೇಗಾವ್ಯಾಟ್ ನಿರ್ವಹಣೆ ಮಾಡುತ್ತಿದ್ದೇವೆ.
13
+ ಕೇಂದ್ರ ಗ್ರೀಡ್‍ನಿಂದ ಒಂದು ಸಾವಿರ ಮೇಗಾವ್ಯಾಟ್ ಖರೀದಿಸುತ್ತಿದ್ದೇವೆ. ಇದಕ್ಕೆ ಕೇ��ದ್ರ ಸರ್ಕಾರ ಮತ್ತು ಅಲ್ಲಿನ ಸಚಿವರು ಕಮಿಷನ್ ಕೊಡುತ್ತಾರೆಯೇ, ವಿರೋಧ ಪಕ್ಷಗಳು ಮಾತನಾಡುವಾಗ ಸಾಮಾನ್ಯ ಜ್ಞಾನ ಬೇಡವೇ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ಖಾಸಗಿಯಿಂದ ವಿದ್ಯುತ್ ಖರೀದಿ ಮಾಡುತ್ತಿಲ್ಲ. ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.
14
+ ಮಳೆ ಕೊರತೆಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಉತ್ಪಾದನೆ-ಪೂರೈಕೆ ನಡುವೆ ಐದು ಸಾವಿರ ಮೇಗಾವ್ಯಾಟ್ ವ್ಯತ್ಯಾಸವಿದೆ. ರಾಜ್ಯ ಸರ್ಕಾರ ಉಚಿತವಾಗಿ ವಿದ್ಯುತ್ ನೀಡುತ್ತಿರುವುದರಿಂದ ಬಹಳಷ್ಟು ಮಂದಿ ಹೆಚ್ಚು ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದರು.
15
+ ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್
16
+ ಕೇಂದ್ರ ಸರ್ಕಾರದ ಅಕಾರಿಗಳು ಅಧ್ಯಕ್ಷತೆಯಲ್ಲಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನೀರು ನಿರ್ವವಣಾ ಪ್ರಾಕಾರಗಳು ತಮಿಳುನಾಡು ಸರ್ಕಾರ ನೀಡುವ ಮನವಿ ಆಧರಿಸಿ ಪದೇ ಪದೇ ನೀರು ಬಿಡುವಂತೆ ಆದೇಶಿಸುತ್ತಿದೆ. ರಾಜ್ಯದಲ್ಲಿರುವ ನೀರಿನ ಕೊರತೆಯನ್ನು ಅಧ್ಯಯನ ನಡೆಸಲು ತಜ್ಞರ ತಂಡ ಕಳುಹಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದರು. ಕೇಂದ್ರ ಜಲಶಕ್ತಿ ಸಚಿವರು ಹಿಂದೇಟು ಹಾಕುತ್ತಿದ್ದಾರೆ. ಇದರ ಹಿಂದೆ ರಾಜ್ಯದಲ್ಲಿ ಗಲಾಟೆಯಾಗಲಿ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿ ಎಂಬ ದುರುದ್ದೇಶ ಇದೆ ಎಂದರು.
17
+ ತಮಿಳುನಾಡಿನಲ್ಲಿ ಅಕಾರದಲ್ಲಿರುವ ಡಿಎಂಕೆ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಿ ಎಂದು ಬಿಜೆಪಿಯವರು ಬಾಲಿಶವಾಗಿ ಹೇಳುತ್ತಿದ್ದಾರೆ. ಏನು ಚರ್ಚೆ ಮಾಡಬೇಕು, ನೀವು ನೀರು ಕೇಳಬೇಕು ಎಂದು ಡಿಎಂಕೆಯನ್ನು ಮನವೋಲಿಸಬೇಕೆ. 120 ವರ್ಷಗಳ ಸಮಸ್ಯೆ ಈ ರೀತಿ ಮನವೋಲಿಕೆಯಿಂದ ಬಗೆಹರಿಯುತ್ತದೆಯೇ ಎಂದು ಪ್ರಶ್ನಿಸಿದರು.
eesanje/url_46_320_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನಾವು 5 ವರ್ಷ ಆಡಳಿತ ನಡೆಸುತ್ತೇವೆ : ಸಿದ್ದರಾಮಯ್ಯ
2
+ ಕೊಪ್ಪಳ, ನ.2- ರಾಜ್ಯದ ಜನ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ನಡೆಸುತ್ತೇವೆ, ಕಾಂಗ್ರೆಸ್ ಸರ್ಕಾರ ಅವಧಿ ಪೂರೈಸಲಿದೆ, ನಂತರ ಚುನಾವಣೆಗೆ ಹೋಗುತ್ತೇವೆ ಮತ್ತೆ ಮರು ಆಯ್ಕೆಯಾಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಅಕಾರ ಹಂಚಿಕೆ ಸೂತ್ರದ ಕುರಿತು ಪ್ರತಿಕ್ರಿಯಿಸಿದ್ದಾರೆ.
3
+ ಕೊಪ್ಪಳದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಎರಡುವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಅಧಿಕಾರ ಹಂಚಿಕೆ ವದ್ಧಂತಿಯ ಬಗ್ಗೆ ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದರು. ಜನ 135 ಜನ ಶಾಸಕರನ್ನು ಗೆಲ್ಲಿಸಿ ಐದು ವರ್ಷ ಆಡಳಿತ ನಡೆಸಲು ಆಶೀರ್ವದಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ ಎಂದರು.
4
+ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್‍ಸಿಂಗ್ ಸುರ್ಜೇವಾಲ ಅವರು ನಿನ್ನೆ ಬೆಂಗಳೂರಿಗೆ ಬಂದಿದ್ದು ಸಂಸತ್ ಚುನಾವಣೆ ಕುರಿತು ಚರ್ಚೆ ಮಾಡಿದ್ದಾರೆ. ಕೆಲ ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಕ ಮಾಡಲು ನಿರ್ಧರಿಸಲಾಗಿದೆ. ಅದರ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದರು.
5
+ ಬಿಜೆಪಿ ಬರ ಅಧ್ಯಯನ ಮಾಡುತ್ತಿರುವ ತಂಡ ನಾಟಕ ಕಂಪನಿ: ಶಿವರಾಜ ತಂಗಡಗಿ
6
+ ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ನಡೆಸುವ ಮೊದಲು ಕೇಂದ್ರದಿಂದ ಅನುದಾನ ಕೊಡಿಸಲಿ. ರಾಜ್ಯದಲ್ಲಿ 32 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. 17 ಸಾವಿರ ರೂಪಾಯಿ ಕೋಟಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಮೊದಲು ಅದಕ್ಕೆ ಕೇಂದ್ರ ಸ್ಪಂದಿಸಲಿ ಎಂದರು.
7
+ ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ರಾಜ್ಯ ಸರ್ಕಾರ ಬರ ನಿರ್ವಹಣೆಗೆ 900 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜಿಲ್ಲಾಕಾರಿಗಳ ವೈಯಕ್ತಿಕ ಖಾತೆಯಲ್ಲಿ 400 ಕೋಟಿ ರೂಪಾಯಿ ಇದೆ. ಕುಡಿಯುವ ನೀರು ಸೇರಿದಂತೆ ಗಂಭೀರ ಸಮಸ್ಯೆಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ. ಜೊತೆ ಪ್ರತಿಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ ನೀಡಿದ್ದೇವೆ ಎಂದರು.
8
+ ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ 600 ಕೋಟಿ ರೂಪಾಯಿ ಬಾಕಿಯನ್ನು ನೀಡಿಲ್ಲ. ರಾಜ್ಯದಲ್ಲಿ ಇರುವ 26 ಸಂಸದರು ಏನು ಮಾಡುತ್ತಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿಯವರನ್ನು ಭೇಟಿ ಮಾಡಿ ಏಕೆ ಒತ್ತಡ ಹೇರುತ್ತಿಲ್ಲ. ನಾವು ಪ್ರಧಾನಿಯವರನ್ನು ಭೇಟಿ ಮಾಡಲು ಯತ್ನಿಸಿದರೂ ಸಮಯ ನೀಡುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ವಿವರಣೆ ನೀಡಲು ನಮ್ಮ ಸಚಿವರಾದ ಕೃಷ್ಣ ಬೈರೇಗೌಡ, ಚಲುವರಾಯಸ್ವಾಮಿ ದೆಹಲಿಗೆ ಹೋಗಿ ಭೇಟಿ ಮಾಡಲು ಯತ್ನಿಸಿದರು ಕೇಂದ್ರ ಸಚಿವರು ಸಮಯ ನೀಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಅವರ ಪಕ್ಷದ ಹೈಕಮಾಂಡ್ ನಾಯಕರು ಸಿಗುತ್ತಿಲ್ಲ, ಇನ್ನೂ ನಮಗೆ ಸಿಗುತ್ತಾರಾ ಎಂದು ತಿರುಗೇಟು ನೀಡಿದರು.
9
+ ಸೋತು ಮನೆಯಲ್ಲಿರುವ ರಮೇಶ್ ಜಾರಕಿಹೊಳಿ ಸೇರಿದಂತೆ ಬಿಜೆಪಿಯ ನಾಯಕರ ಟೀಕೆಗಳಿಗೆ ನಾವು ಉತ್ತರ ನೀಡುವ ಅಗತ್ಯ ಇಲ್ಲ. ಬಿಜೆಪಿಯವರು ರಾಜ್ಯವನ್ನು ದಿವಾಳಿ ಮಾಡಿದ್ದರೂ ನಾವು ಪಂಚಖಾತ್ರಿ ಯೋಜನೆ ಜಾರಿಗೆ ತಂದಿದ್ದೇವೆ. ಅದರ ಬಗ್ಗೆ ಮೊದಲು ಚರ್ಚೆ ಮಾಡಲಿ ಎಂದರು.
10
+ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅವರು ನನ್ನ ಬಳಿ ಯಾವ ಚರ್ಚೆಯನ್ನೂ ಮಾಡಿಲ್ಲ. ಖಾಸಗಿಯಾಗಿ ಪ್ರವಾಸ ಮಾಡಿದರೆ ಅದು ಯಾಕೆ ಚರ್ಚೆಯಾಗಬೇಕು, ಸರ್ಕಾರದ ಹಣದಲ್ಲಿ ಪ್ರವಾಸ ಮಾಡಿದರೆ ಪ್ರಶ್ನೆ ಮಾಡಬೇಕು. ಇಲ್ಲವಾದರೆ ಯಾಕೆ ಅಡ್ಡಿ ಪಡಿಸಬೇಕು ಎಂದರು.
eesanje/url_46_320_5.txt ADDED
@@ -0,0 +1,7 @@
 
 
 
 
 
 
 
 
1
+ ಶನಿವಾರ ದುಬೈನಿಂದ ಎಚ್‍ಡಿಕೆ ವಾಪಸ್
2
+ ಬೆಂಗಳೂರು,ನ.2- ಕಳೆದ ಐದಾರು ದಿನಗಳಿಂದ ದುಬೈ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನ.4 ರಂದು ನಗರಕ್ಕೆ ವಾಪಸ್ಸಾಗಲಿದ್ದಾರೆ.
3
+ ಯುಎಇ ಒಕ್ಕಲಿಗರ ಸಂಘದ ನಾಡಪ್ರಭು ಕೆಂಪೇಗೌಡರ ಉತ್ಸವದಲ್ಲಿ ಪಾಲ್ಗೊಳ್ಳಲು ಕುಮಾರಸ್ವಾಮಿ ಅವರು ದುಬೈ ಪ್ರವಾಸ ಕೈಗೊಂಡಿದ್ದರು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್ ಮೊದಲಾದವರು ಸಹ ದುಬೈನಲ್ಲಿ ನಡೆದ ಕೆಂಪೇಗೌಡರ ಉತ್ಸವದಲ್ಲಿ ಪಾಲ್ಗೊಂಡಿದ್ದರು.
4
+ ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್
5
+ ದುಬೈನಲ್ಲಿರುವ ಕನ್ನಡಿಗರೊಂದಿಗೆ ಕುಮಾರಸ್ವಾಮಿ ನಿನ್ನೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ನಾಳೆಯವರೆಗೆ ದುಬೈನಲ್ಲಿ ಉಳಿಯಲಿರುವ ಕುಮಾರಸ್ವಾಮಿ ಶನಿವಾರ ಬೆಳಗಿನ ಜಾವ ನಗರಕ್ಕೆ ಆಗಮಿಸುವರು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
6
+ ಕುಮಾರಸ್ವಾಮಿ ಮರಳಿದ ಬಳಿಕ ಪ್ರಚಲಿತ ರಾಜಕೀಯ ವಿದ್ಯಾಮಾನ, ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಬರಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುವ ಕುರಿತಂತೆ ಸಭೆ ನಡೆಸಲಿದ್ದಾರೆ.
7
+ ಈ ಸಂಬಂಧ ನ.4ರಂದು ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಸಭೆ ಕರೆಯಲಾಗಿದ್ದು, ಅಷ್ಟರಲ್ಲಿ ಕುಮಾರಸ್ವಾಮಿ ರಾಜ್ಯಕ್ಕೆ ಮರಳಲಿದ್ದಾರೆ ಎಂದು ಹೇಳಲಾಗಿದೆ.
eesanje/url_46_320_6.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳ್ಳತನ, ಕಾರು ಚಾಲಕ ಸೇರಿ ನಾಲ್ವರ ಬಂಧನ
2
+ ಬೆಂಗಳೂರು, ನ.2- ಚಿತ್ರದುರ್ಗದ ಅಡಿಕೆ ವ್ಯಾಪಾರಿಯ ಕಾರಿನಲ್ಲಿದ್ದ ಒಂದು ಕೋಟಿ ಹಣ ಕಳ್ಳತನ ಮಾಡಿದ್ದ ಕಾರಿನ ಚಾಲಕ ಸೇರಿದಂತೆ ನಾಲ್ವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿ 90.19 ಲಕ್ಷ ರೂ. ನಗದು, ಕಳ್ಳತನ ಮಾಡಿದ ಹಣದಲ್ಲಿ ಖರೀದಿಸಿದ ಮೊಬೈಲ್‍ಗಳು, ವಾಚ್‍ಗಳು, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
3
+ ಕಾರು ಚಾಲಕ ಮೂಲತಃ ಚಿತ್ರದುರ್ಗ ಜಿಲ್ಲೆ ಹೋಳಲಕೆರೆ ತಾಲ್ಲೂಕಿನ ತಾಳ್ಯ ಗ್ರಾಮದ ಸ್ವಾಮಿ (34), ಈತನ ಸ್ನೇಹಿತೆ ನಗರದ ಮಹದೇವಪುರದ ನಿವಾಸಿ ಅನುಪಮ (38) ಈಕೆಯ ಸ್ನೇಹಿತ ಚಿತ್ರದುರ್ಗದ ಜಜಲರ ಹಟ್ಟಿ ನಿವಾಸಿ ಪವನ್ (30) ಹಾಗೂ ಹಾಸನ ಜಿಲ್ಲೆ ಸಕಲೇಶಪುರದ ಮಹೇಶ್ವರಿ ನಗರ ನಿವಾಸಿ ಕಾರ್ತಿಕ್ (27) ಬಂಧಿತ ಆರೋಪಿಗಳು.
4
+ ಅಂತರ್‍ರಾಜ್ಯ ಅಡಿಕೆ ವ್ಯಾಪಾರಿ, ಚಿತ್ರದುರ್ಗದ ಭೀಮಸಮುದ್ರ ನಿವಾಸಿ ಉಮೇಶ್ ಎಂಬುವವರು ವಿವಿಧ ರಾಜ್ಯಗಳಿಗೆ ತೆರಳಿ ಅಡಿಕೆಯನ್ನು ಖರೀದಿಸುತ್ತಾರೆ. ಅದರಂತೆ ಅಕ್ಟೋಬರ್ 20ರಂದುಅಡಿಕೆ ಖರೀದಿಸಲು ಒಂದು ಕೋಟಿ ಹಣವನ್ನು ಬ್ಯಾಗ್‍ನಲ್ಲಿಟ್ಟುಕೊಂಡು ಕಾರಿನಲ್ಲಿ ಚಾಲಕ ಸ್ವಾಮಿ ಜೊತೆ ಹೋಗಿದ್ದು, ಮೊದಲು ಚಿತ್ರದುರ್ಗದಲ್ಲೇ ಖರೀದಿಗೆ ಹೋದಾಗ ವ್ಯಾಪಾರ ಕುದುರಿಲ್ಲ.
5
+ ಹಾಗಾಗಿ ವಾಪಸ್ಸು ಅಲ್ಲಿಂದ ಶಿರಾಕ್ಕೆ ಬಂದಿದ್ದಾರೆ. ಶಿರಾದಲ್ಲೂ ಅಡಿಕೆ ವ್ಯಾಪಾರ ಸರಿಬರಲಿಲ್ಲ. ನಂತರ ತುಮಕೂರಿಗೆ ಹೋಗಿದ್ದಾರೆ ಅಲ್ಲಿಯೂ ಅಡಿಕೆ ತೆಗೆದುಕೊಂಡಿಲ್ಲ. ವಾಪಸ್ಸು ಊರಿಗೆ ಹೋಗುವ ಮುನ್ನ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳು ಹಾಗೂ ಸ್ನೇಹಿತನ ಮಕ್ಕಳನ್ನು ಮಾತನಾಡಿಸಿಕೊಂಡು ಹೋಗೋಣವೆಂದು ನಿರ್ಧರಿಸಿ ಬೆಂಗಳೂರಿಗೆ ಬಂದಿದ್ದಾರೆ.
6
+ ಮೊದಲು ನಗರದ ಗಾಂನಗರಕ್ಕೆ ಬಂದು ಹೋಟೆಲ್‍ವೊಂದರ ಮುಂಭಾಗ ಕಾರ್ ಪಾರ್ಕಿಂಗ್ ಮಾಡಿ ಊಟ ಮುಗಿಸಿಕೊಂಡು ಚಂದ್ರಲೇಔಟ್‍ನ ಪಿಜಿಗೆ ಹೋಗಿ ಮಕ್ಕಳನ್ನು ಮಾತನಾಡಿಸಿಕೊಂಡು ನಂತರ ವಾಪಸ್ಸು ಭೀಮಸಮುದ್ರಕ್ಕೆ ಹಿಂದಿರುಗಿದ್ದಾರೆ.
7
+ ರಾತ್ರಿ ಮನೆಗೆ ಹೋದ ಉಮೇಶ್ ಅವರು ಹಣವಿದ್ದ ಬ್ಯಾಗ್ ತೆಗೆದುಕೊಳ್ಳಲು ಕಾರಿನ ಡಿಕ್ಕಿ ತೆಗೆದು ನೋಡಿದಾಗ ಒಂದು ಕೋಟಿ ಹಣವಿದ್ದ ಬ್ಯಾಗ್ ಇರಲಿಲ್ಲ. ಇದರಿಂದ ಗಾಬರಿಯಾದ ಉಮೇಶ್ ಅವರು ಏನು ಮಾಡಬೇಕೆಂದು ತೋಚದೆ, ಹಣ ಎಲ್ಲಿ ಕಳ್ಳತನವಾಗಿದೆ ಎಂದು ತಿಳಿಯದೇ ಅ.21ರಂದು ವಾಪಸ್ಸು ಬೆಂಗಳೂರಿಗೆ ಬಂದು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿ ತಮ್ಮ ಕಾರಿನ ಚಾಲಕ ಸ್ವಾಮಿ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ.
8
+ ಬಿಜೆಪಿ ಬರ ಅಧ್ಯಯನ ಮಾಡುತ್ತಿರುವ ತಂಡ ನಾಟಕ ಕಂಪನಿ: ಶಿವರಾಜ ತಂಗಡಗಿ
9
+ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರುಕಾರು ಚಾಲಕ ಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತನ ಸ್ನೇಹಿತರು ಸೇರಿ ಒಂದು ಕೋಟಿ ಹಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಉಮೇಶ್ ಅವರ ಬಳಿ ಸ್ವಾಮಿ ಹದಿನೈದು ವರ್��ದಿಂದ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಉಮೇಶ್ ಅವರು ಅಡಿಕೆ ವ್ಯಾಪಾರಕ್ಕೆ ಹೋಗುವಾಗ ಕೋಟಿ ಕೋಟಿ ಹಣ ತೆಗೆದುಕೊಂಡು ಹೋಗುತ್ತಾರೆಂಬ ವಿಷಯವನ್ನು ಸ್ನೇಹಿತೆ ಅನುಪಮಾಗೆ ತಿಳಿಸಿದ್ದನು.
10
+ ಅಡಿಕೆ ವ್ಯಾಪಾರಿ ಬಳಿ ಕೋಟಿ ಕೋಟಿ ಹಣ ಇರುವುದನ್ನು ತಿಳಿದುಕೊಂಡ ಅನುಪಮಾ, ಸ್ವಾಮಿಯ ಸಹಾಯದಿಂದ ಕಾರಿನ ನಕಲಿ ಕೀ ಮಾಡಿಸಿಕೊಂಡು, ಮತ್ತೆ ಯಾವಾಗ ಬೆಂಗಳೂರಿಗೆ ಬರುತ್ತೀರೆಂದು ಸ್ವಾಮಿಯನ್ನು ವಿಚಾರಿಸಿ ಸ್ನೇಹಿತ ಪವನ್‍ಗೆ ತಿಳಿಸಿದ್ದಾಳೆ. ಅದರಂತೆ ಪವನ್ ತನ್ನ ಸ್ನೇಹಿತ ಕಾರ್ತಿಕ್ ಜೊತೆ ಗಾಂನಗರಕ್ಕೆ ಹೋಗಿದ್ದು, ವ್ಯಾಪಾರಿ ಉಮೇಶ್ ಅವರ ಕಾರು ಹೋಟೆಲ್ ಮುಂದೆ ನಿಂತಿದ್ದಾಗ ನಕಲಿ ಕೀ ಬಳಸಿ ಡಿಕ್ಕಿಯಲ್ಲಿದ್ದ ಒಂದು ಕೋಟಿ ಹಣವಿದ್ದ ಬ್ಯಾಗ್ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ವಿಚಾರ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
11
+ ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್
12
+ ಆರೋಪಿಗಳಿಂದ ಕಳ್ಳತನ ಮಾಡಿದ್ದ ಒಂದು ಕೋಟಿ ಹಣದ ಪೈಕಿ 90, 19, 500 ರೂ. ನಗದು, ಕಳ್ಳತನ ಮಾಡಿದ್ದ ಹಣದಲ್ಲಿ ಖರೀದಿಸಿದ್ದ 6.49 ಲಕ್ಷ ರೂ. ಮೌಲ್ಯದ 2 ಆ್ಯಪಲ್ ಕಂಪನಿಯ ಐಫೆÇೀನ್‍ಗಳು, ಒಂದು ಜೊತೆ ಹಿಯರ್ ಫೋನ್, 2 ಫಾಸಿಲ್ ಕಂಪನಿಯ ವಾಚ್‍ಗಳು, ಒಂದು ಆ್ಯಪಲ್ ಕಂಪನಿಯ ಐ ವಾಚ್, 61.670 ಗ್ರಾಂ ತೂಕದ ಚಿನ್ನಾಭರಣಗಳು, ಆರೋಪಿಗಳು ಕೃತ್ಯಕ್ಕೆ ಬಳಸಿದ್ದ 4 ಮೊಬೈಲ್ ಫೆÇೀನ್‍ಗಳು, ಒಂದು ಮಾರುತಿ ಸಿಯಾಜ್ ಡೆಲ್ಟಾ ಕಾರ್, ಒಂದು ಫೋಲೋ ಕಾರ್ ಮತ್ತು ಒಂದು ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.
13
+ ಈ ಕಾರ್ಯಾಚರಣೆಯಲ್ಲಿ ಪಶ್ಚಿಮ ವಿಭಾಗದ ಉಪ-ಫೋಲೀಸ್ ಆಯುಕ್ತ ಗಿರೀಶ್ ಅವರ ನೇತೃತ್ವದಲ್ಲಿ ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಫೋಲೀಸ್ ಆಯುಕ್ತ ರಮೇಶ್, ಇನ್ಸ್‍ಪೆಕ್ಟರ್ ಮಾರುತಿ ಮತ್ತು ಸಿಬ್ಬಂದಿ ತಂಡ ಅವಿರತವಾಗಿ ಶ್ರಮಿಸಿ ನಾಲ್ವರನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗದೆ.
eesanje/url_46_320_7.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್
2
+ ಬೆಂಗಳೂರು,ನ.2-ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿನ ಸೊಳ್ಳೆಗಳ ಪರೀಕ್ಷೆ ವೇಳೆ ಮಾರಕ ಝಿಕಾ ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆರಂಭಿಕ ಹಂತದಲ್ಲೇ ಮಾರಕ ವೈರಸ್‍ಗೆ ಕಡಿವಾಣ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ ತಲಕಾಯಲಬೆಟ್ಟ ಗ್ರಾಮದ 5 ಕಿಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳಲ್ಲಿ 31 ಗರ್ಭಿಣಿಯರ ರಕ್ತ ಮಾದರಿಗಳನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಿದೆ. ಇನ್ನೂ ಜೊತೆಯಲ್ಲಿ 4 ಮಂದಿ ಜ್ವರಪೀಡಿತರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.
3
+ ಮಾದರಿ ಪರೀಕ್ಷೆಗಳ ವರದಿ ಬರಲು 15 ದಿನಗಳಾಗಲಿದ್ದು, ವರದಿ ಬಂದ ನಂತರ ಝಿಕಾ ವೈರಸ್ ಇದೆಯೋ ಇಲ್ಲವೋ ಎಂಬುದು ಖಚಿತವಾಗಲಿದೆ. ಅಲ್ಲಿಯವರೆಗೂ ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಉತ್ತಮ ಪೋಷಕಾಂಶಯುಕ್ತ ಆಹಾರ ಸೇವನೆಗೆ ಸೂಚನೆ ನೀಡಲಾಗಿದೆ. ಸೊಳ್ಳೆ ಪರದೆ ಬಳಸಿಕೊಂಡು ಮಲಗಲು ಸೂಚಿಸಲಾಗಿದೆ. ಸೊಳ್ಳೆ ಕಡಿತದಿಂದ ಸ್ವಯಂ ರಕ್ಷಣೆ ಮಾಡಿಕೊಂಡು ಝಿಕಾ ವೈರಸ್ ಆತಂಕದಿಂದ ದೂರ ಇರಲು ಸಲಹೆ ನೀಡಲಾಗುತ್ತಿದೆ.
4
+ ಪ್ರಶಸ್ತಿ ಪುರಸ್ಕೃತರ ಹೆಸರನ್ನು ತಪ್ಪಾಗಿ ಓದಿ ನಗೆಪಾಟಲಿಗೀಡಾದ ಸಚಿವ ತಂಗಡಗಿ
5
+ ಮುಂಜಾಗ್ರತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿ ಕೀಟಶಾಸ್ತ್ರಜ್ಞರು ಸೊಳ್ಳೆಗಳ ಪರೀಕ್ಷೆ ನಡೆಸಿದ್ದರು. ಜಿಲ್ಲೆಯ 6 ಕಡೆಗಳಲ್ಲೂ ಸೊಳ್ಳೆಗಳ ಪರೀಕ್ಷೆ ನಡೆದಿತ್ತು. ತಲಕಾಯಲ ಬೆಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದು ಪತ್ತೆಯಾಗಿದೆ. ಈ ಬೆಟ್ಟ ವ್ಯಾಪ್ತಿಯ 5 ಕಿ.ಮೀ. ಸುತ್ತ ಮುತ್ತಲ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
6
+ ತಲಕಾಯಲಬೆಟ್ಟದಲ್ಲಿ ಕೀಟಶಾಸ್ತ್ರಜ್ಞರು ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದು ದೃಢಪಡಿಸಿದ ಬೆನ್ನಲ್ಲೇ ವಿಶೇಷ ಸಭೆ ನಡೆಸಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ತಲಕಾಯಲಬೆಟ್ಟದಿಂದ 5 ಕಿ.ಮೀ. ವ್ಯಾಪ್ತಿಯ ವೆಂಕಟಾಪುರ, ದಿಟ್ಟೂರಹಳ್ಳಿ, ಬಚ್ಚನಹಳ್ಳಿ, ವಡ್ಡಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ 30 ಮಂದಿ ಗರ್ಭಿಣಿಯರು ಮತ್ತು ಜ್ವರ ಪೀಡಿತ 7 ಮಂದಿ ರಕ್ತವನ್ನು ಪಡೆದು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದು, ವರದಿಗಾಗಿ ಕಾಯಲಾಗುತ್ತಿದೆ.
7
+ ಮಾರಕ ಝಿಕಾ ವೈರಸ್ ಗರ್ಭಿಣಿಯರಿಗೆ ಹರಡುವ ಸೋಂಕು. ಇದು ಮುಖ್ಯವಾಗಿ ಸೊಳ್ಳೆಗಳಿಂದ ಹರಡುವ ಕಾಯಿಲೆ. ಪ್ರಾರಂಭದಲ್ಲಿ ಸೌಮ್ಯ ಲಕ್ಷಣ ಇರಲಿದ್ದು, ನಂತರದಲ್ಲಿ ಜೀವ ತೆಗೆಯುವ ಮಾರಣಾಂತಿಕ ರೋಗವಾಗಿ ಬದಲಾಗುತ್ತದೆ. ಝಿಕಾ ಸ್ವತಃ ಮಾರಣಾಂತಿಕ ಅಲ್ಲದಿದ್ದರೂ ಅಪಾಯ ತಂದೊಡ್ಡಲಿದೆ. ಈ ರೋಗದ ಲಕ್ಷಣಗಳು ಒಂದು ವಾರದೊಳಗೆ ಕಣ್ಮರೆಯಾಗುತ್ತವೆ. ಗರ್ಭಿಣಿ ಸೋಂಕಿಗೆ ಒಳಗಾದಾಗ ಈ ರೋಗವು ಹುಟ್ಟಲಿ���ುವ ಮಗುವಿನ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತದೆ.
8
+ ಎಗಿಫ್ಟಿ ಮತ್ತು ಈಡಿಯಸ್ ಅಲ್ಲೋ ಪಿಕ್ಸಸ್ ಸೊಳ್ಳೆಗಳಿಂದ ಝಿಕಾ ವೈರಸ್ ಮನುಷ್ಯನಿಗೆ ಹರಡುತ್ತದೆ. ಸೊಳ್ಳೆಯು ಸೋಂಕಿತ ವ್ಯಕ್ತಿಯನ್ನು ಕಚ್ಚಿದ ನಂತರ, ಕಾ ವೈರಸ್ ಸೊಳ್ಳೆಯ ವ್ಯವಸ್ಥೆ ಪ್ರವೇಶಿಸುತ್ತದೆ. ಅದರ ದೇಹದಲ್ಲಿ ಪುನರಾವರ್ತಿಸುತ್ತದೆ ಮತ್ತು ಅದರ ಲಾಲಾರಸ ಗ್ರಂಥಿ ಗಳಿಗೆ ಹರಡುತ್ತದೆ. ಈ ವೈರಸ್ ಸೊಳ್ಳೆಯಲ್ಲಿ ಎಂಟರಿಂದ ಹತ್ತು ದಿನಗಳವರೆಗೆ ಕಾವು ಕೊಡುತ್ತದೆ. ಅಂತಹ ಸೊಳ್ಳೆ. ಕಚ್ಚಿದಾಗ ವೈರಸ್ ವ್ಯಕ್ತಿಗೆ ಹರಡುತ್ತದೆ. ಸೊಳ್ಳೆ ಕಚ್ಚಿದ ನಂತರ ವ್ಯಕ್ತಿಯಲ್ಲಿ ಕಾ ವೈರಸ್‍ನ ಕಾವು ಕಾಲಾವಧಿ ಮೂರರಿಂದ 12 ದಿನಗಳವರೆಗೆ ಇರುತ್ತದೆ.
9
+ ಝಿಕಾ ವೈರಸ್ ಲಕ್ಷಣಗಳು ಝಿಕಾ ವೈರಸ್ ಒಳಗಾದವರು ಸಾಮಾನ್ಯವಾಗಿ ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವಿನ ರೋಗದ ಲಕ್ಷಣ ಗಳನ್ನು ಅನುಭವಿಸುತ್ತಾರೆ ಅಥವಾ ತುಂಬಾ ಸೌಮ್ಯವಾದ ರೋಗಲಕ್ಷಣಗಳನ್ನು ಅನುಭವಿಸುತ್ತಾರೆ. ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಂತೆ ಇರುತ್ತದೆ. ಜ್ವರ, ದದ್ದು, ತಲೆನೋವು, ಕೀಲುನೊವು, ಆಯಾಸ, ಕೆನ್ನೆಗಳ ಊತ, ಬೆವರುವುದು, ತಣ್ಣಗಾಗುವುದು, ವಾಂತಿ, ರಕ್ತಸಿಕ್ತ ಕಣ್ಣುಗಳು ಲಕ್ಷಣಗಳು ಗೋಚರಿಸುತ್ತವೆ.
10
+ ರಾಜಸ್ಥಾನ : ಇಡಿ ಅಧಿಕಾರಿಗಳನ್ನೇ ಬಂಧಿಸಿದ ಎಸಿಬಿ
11
+ ಝಿಕಾ ಬರದಂತೆ ತಡೆಗೆಟ್ಟುವುದು ಹೇಗೆ?:ಸೋಂಕು ಬಂದ ಮೇಲೆ ಪರದಾಡುವುದಕ್ಕಿಂತ ಸೋಂಕು ಬಾರದಂತೆ ತಡೆಯುವುದು ಅತೀ ಅಗತ್ಯ. ಇದಕ್ಕಾಗಿ ಕೆಲವು ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳಬೇಕು. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.
12
+ ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಎಲ್ಲರೂ ಸೊಳ್ಳೆಗಳ ಕಾಟ ತಡೆಗೆ ಕ್ರಮಕೈಗೊಳ್ಳಬೇಕು. ಪ್ರಸ್ತುತ ಝಿಕಾ ವೈರಸ್ ಸೋಂಕಿಗೆ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ವಿಜ್ಞಾನಿಗಳು ದೀರ್ಘ ಕಾಲದವರೆಗೆ ವೈರಸ್ ಹಾನಿಕರವಲ್ಲ ಅಂತ ಭಾವಿಸಿದ್ದರು. ಸದ್ಯ ರೋಗ ಲಕ್ಷಣಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಆದ್ದರಿಂದ ವೈದ್ಯರು ಜ್ವರ ಕಡಿಮೆ ಮಾಡುವ ಔಷಧಿ ನೀಡುತ್ತಾರೆ. ವಾಂತಿ ಮತ್ತು ದದ್ದುಗಳಿಗೆ ಔಷಧಗಳನ್ನು ಸೂಚಿಸಬಹುದು.
13
+ ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ.
eesanje/url_46_320_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಝೆಡ್-ಕೆಟಗರಿ ಭದ್ರತೆ ಪಡೆಯದ ಯಡಿಯೂರಪ್ಪ
2
+ ಬೆಂಗಳೂರು,ನ.2- ರಾಜ್ಯ ಬಿಜೆಪಿಯ ಸರ್ವೋಚ್ಛ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಸಚಿವಾಲಯವು ವಾರದ ಹಿಂದೆ ಝೆಡ್-ಕೆಟಗರಿ ಭದ್ರತೆಯನ್ನು ನೀಡಿತ್ತು, ಆದರೆ ಯಡಿಯೂರಪ್ಪನವರು ಇನ್ನೂ ಭದ್ರತೆಯನ್ನು ತೆಗೆದುಕೊಂಡಿಲ್ಲ.
3
+ ಯಡಿಯೂರಪ್ಪನವರು ಬಿಜೆಪಿಯಲ್ಲಿ ಪಕ್ಷದ ಅಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಯಲ್ಲ. ಮೇಲ್ ಅಥವಾ ಫೋನ್ ಮೂಲಕವೂ ಅವರಿಗೆ ಯಾವುದೇ ಬೆದರಿಕೆಗಳು ಬಂದಿಲ್ಲ. ಹಾಗಿರುವಾಗ ಕೇಂದ್ರ ಸರ್ಕಾರ ಅವರಿಗೆ ಈ ಮಟ್ಟದ ಭದ್ರತೆಯನ್ನು ಏಕೆ ನೀಡುತ್ತಿದೆ ಎಂಬ ಪ್ರಶ್ನೆ ಉದ್ಭವವಾಗಿದೆ.
4
+ ಎಲ್ಲಾ ಸಮಯದಲ್ಲೂ ನಾಯಕನ ಚಲನವಲನಗಳ ಮೇಲೆ ನಿಗಾ ಇರಿಸಿಕೊಳ್ಳಲು - ಮಟ್ಟದ ಭದ್ರತೆ ನೀಡಲಾಗುತ್ತದೆ. ಪ್ರಬಲ ಲಿಂಗಾಯತ ವಲಯಗಳಲ್ಲಿನ ಅನೇಕರು ಕೇಂದ್ರ ಗೃಹ ಸಚಿವಾಲಯವು ಮಾಜಿ ಸಿಎಂಗೆ ಅಂತಹ ಹೆಚ್ಚಿನ ಭದ್ರತೆಯನ್ನು ಒದಗಿಸುವಂತೆ ಮಾಡುತ್ತಿರುವ ಬೆದರಿಕೆಯ ಗ್ರಹಿಕೆ ಏನೆಂದು ಯೋಚಿಸುತ್ತಿದ್ದಾರೆ.
5
+ ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ಅವರ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ ಮುಂದಾಗಿದೆಯೇ ಎಂಬ ಸಂದೇಹ ವ್ಯಕ್ತವಾಗಿದೆ. ಕೆಲವು ಸಿಆರ್‍ಪಿಎಫ್ ಅಧಿಕಾರಿಗಳು ಮೊನ್ನೆ ಮಂಗಳವಾರ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಯಡಿಯೂರಪ್ಪ ಅವರ ಆಪ್ತ ವಲಯದ ಮೂಲಗಳು, ಝಡ್ ಮಟ್ಟದ ಭದ್ರತೆಯನ್ನು ಒಪ್ಪಿಕೊಳ್ಳುವುದು-ಬಿಡುವುದು ಅವರಿಗೆ ಬಿಟ್ಟಿದ್ದು ಎನ್ನುತ್ತಾರೆ.
6
+ ಗೃಹ ಸಚಿವಾಲಯದ ಭದ್ರತೆ ವಿಷಯ ನಗೆಪಾಟಲಿಗೀಡಾಗಬಾರದು. ಯಡಿಯೂರಪ್ಪ ಗಾಂಧಿ ಬಜಾರ್‍ನಲ್ಲಿ ನಿಂತು ಯಾವುದೇ ಬೆದರಿಕೆಯಿಲ್ಲದೆ ಚಾಟ್ ತಿನ್ನುವ ರಾಜಕಾರಣಿ. ಅವರು ಎಲ್ಲರಿಗೂ ಒಪ್ಪಿಗೆಯಾಗುವ ಬಹು ಪ್ರೀತಿಯ ನಾಯಕ. ಬಹುಶಃ ಅವರು ಕರ್ನಾಟಕದ ಅತ್ಯಂತ ಜಾತ್ಯತೀತ ಬಿಜೆಪಿ ನಾಯಕರಾಗಿದ್ದಾರೆ. ಭದ್ರತೆ ಅವರಿಗೆ ಏಕೆ ಬೇಕು, ಅವರಿಗೆ ಯಾವುದಾದರೂ ಬೆದರಿಕೆಗಳು ಅಥವಾ ಎಚ್ಚರಿಕೆ ಪತ್ರಗಳು ಬಂದಿವೆಯೇ ಏನೂ ಇಲ್ಲವಲ್ಲ ಎನ್ನುತ್ತಾರೆ ಅವರ ಆಪ್ತ ವಲಯಗಳು.
7
+ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ : ಬಿಎಸ್‌ವೈ
8
+ ಕರ್ನಾಟಕ ಉತ್ತರ ಪ್ರದೇಶವೇ ಅಥವಾ ಮಧ್ಯಪ್ರದೇಶವೇ? ದೆಹಲಿಯಲ್ಲಿ ಯಾರೋ ತಮ್ಮ ಲೆಕ್ಕಾಚಾರವನ್ನು ತಪ್ಪಾಗಿ ಗ್ರಹಿಸಿದ್ದಾರೆಂದು ತೋರುತ್ತಿದೆ. ಬಿಜೆಪಿಯ ಮಾಜಿ ಪದಾಕಾರಿಯೊಬ್ಬರು, ಬಹುಶಃ ಇದು ಕೇಂದ್ರದ ಗೌರವದ ವಿಧಾನವಾಗಿದೆ ಎಂದು ಹೇಳಿದರು. ಯಡಿಯೂರಪ್ಪನವರಿಗೆ ಯಾವುದೇ ಬೆದರಿಕೆಗಳ ಕುರಿತು ಅವರು, ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಕೋಮು ಘಟನೆಯ ನಂತರ, ಯಾವುದನ್ನೂ ತಳ್ಳಿಹಾಕಲು ಸಾಧ್ಯವಿಲ್ಲ. ಅದು ಅವರ ಭದ್ರತೆಯನ್ನು ಮೇಲ್ದರ್ಜೆಗೇರಿಸಲು ಕಾರಣವಾಗಿರಬಹುದು.
9
+ ಕೆಲವು ಬೆದರಿಕೆ ಗ್ರಹಿಕೆ ಅಥವಾ ಕೆಲವು ಗುಪ್ತಚರ ಮಾಹಿತಿಗಳು ಇದ್ದಾಗ, ಕೇಂದ್ರ ಗೃಹ ಸಚಿವಾಲಯವು ಅಂತಹ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಪಕ್ಷದ ಮುಖಂಡರು ಹೇಳುತ್ತಾರೆ.
eesanje/url_46_320_9.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್
2
+ ಬೆಂಗಳೂರು, ನ.2- ರಾಜ್ಯದಲ್ಲಿನ ಬರ ಪರಿಹಾರ ಹಣ ನೀಡಬೇಕಾದ ಕೇಂದ್ರ ಸರ್ಕಾರ, ಅಧಿಕಾರಿಗಳ ತಂಡದಿಂದ ಕಾಟಾಚಾರದ ಅಧ್ಯಯನ ನಡೆಸಿದ್ದು, ಈವರೆಗೂ ರಾಜ್ಯಕ್ಕೆ ನಯಾ ಪೈಸೆ ಅನುದಾನ ನೀಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ನಿಂತು ಮೂರು ತಿಂಗಳಾಗಿದೆ, ಆಗಿನಿಂದಲೇ ಬರ ಪರಿಸ್ಥಿತಿ ಇದೆ. ಬಿಜೆಪಿಯವರು ಇಷ್ಟು ದಿನ ಏಕೆ ಸುಮ್ಮನ್ನಿದ್ದರು. ಈಗ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
4
+ ರಾಜ್ಯ ಸರ್ಕಾರ 200ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಸುಮಾರು 32 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. 17 ಸಾವಿರ ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ, ಬಿಜೆಪಿಯವರು ಮೊದಲು ಹಣ ಕೊಡಿಸಲಿ ಎಂದು ಆಗ್ರಹಿಸಿದರು.
5
+ ಕೇಂದ್ರ ಸರ್ಕಾರದಿಂದ ಈವರೆಗೂ ಒಂದು ಪೈಸೆ ಬಿಡುಗಡೆಯಾಗಿಲ್ಲ. ಕೇಂದ್ರದಿಂದ ಆಗಮಿಸಿದ ಬರ ಅಧ್ಯಯನ ತಂಡ ತಾವು ನೋಡಿದ ಕಡೆ ಹಸಿರು ಇದೆ ಎಂದು ವರದಿ ನೀಡಿದೆ. ತಂಡ ಬರುವ ಮುನ್ನಾ ಎರಡು ಮೂರು ದಿನ ರಾಜ್ಯದಲ್ಲಿ ಮಳೆಯಾಗಿತ್ತು, ಹಾಗಾಗಿ ಹಸಿರು ಕಾಣಿಸಿದೆ. ಅಂದ ಮಾತ್ರಕ್ಕೆ ಬೆಳೆಯಾಗಿದೆ ಎಂದು ಅರ್ಥವೇ. ಕೂಲಂಕುಶವಾಗಿ ಪರಿಶೀಲನೆ ನಡೆಸಬೇಕಿತ್ತಲ್ಲವೇ ? ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕೆ ಹಣ ನೀಡಬೇಕು ಎಂಬ ಕಾಳಜಿ ಇದ್ದರೆ ಕೇಂದ್ರ ತಂಡ ರಾಜ್ಯದ ಅಕಾರಿಗಳು, ಸಚಿವರು, ಮುಖ್ಯಮಂತ್ರಿಯವರ ಜೊತೆ ಕುಲಂಕುಶವಾಗಿ ಚರ್ಚೆ ಮಾಡಬೇಕಿತ್ತು. ನೆಪ ಮಾತ್ರಕ್ಕೆ ಕಾಟಾಚಾರಕ್ಕೆ ಅಧ್ಯಯನ ಮಾಡಿದ್ದಾರೆ ಎಂದು ಆರೋಪಿಸಿದರು.
6
+ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆ ಆಧಾರಿಸಿ ಎನ್‍ಡಿಆರ್‍ಎಫ್ ಅಡಿ ನೀಡಬೇಕಾದ ಹಣವನ್ನಾದರೂ ಮುಂಗಡವಾಗಿ ನೀಡಬೇಕಿತ್ತು ಅಥವಾ ವಿಶೇಷ ಅನುದಾನವನ್ನಾದರೂ ನೀಡಬೇಕು. ಹಿಂದೆಲ್ಲಾ ಕಾಂಗ್ರೆಸ್ ಸರ್ಕಾರದಲ್ಲಿ ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ ವಿಶೇಷ ಅನುದಾನವನ್ನಾಗಿ 2 ಸಾವಿರ ಕೋಟಿ ರೂಪಾಯಿ ನೀಡಲಾಗಿತ್ತು. ಈಗಲೂ ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
7
+ ರಾಜ್ಯದಲ್ಲಿ ಬರ ಪರಿಸ್ಥಿತಿಗೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಸರ್ವ ಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗಲು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಲಾಗುವುದು. ಸಾಧ್ಯವಾಗದಿದ್ದರೆ ರಾಜ್ಯ ಸರ್ಕಾರದ ಎಲ್ಲಾ ಸಚಿವರು ದೆಹಲಿಗೆ ಹೋಗಿ ಪ್ರಯತ್ನಿಸುವ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.
8
+ ಭಾರತಕ್ಕೆ ಬರುತ್ತಿದ್ದಾರೆ ಅಮೆರಿಕ ವಿದೇಶಾಂಗ, ರಕ್ಷಣಾ ಕಾರ್ಯದರ್ಶಿಗಳು
9
+ ಬಿಜೆಪಿಯವರು ವಸೂಲಿಗೆ ಬರುತ್ತಿದ್���ರೆ ?ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಬೆಂಗಳೂರಿಗೆ ಬಂದು ಸಭೆ ನಡೆಸಿದಾಕ್ಷಣ ಪಂಚರಾಜ್ಯಗಳ ಚುನಾವಣೆಗೆ ಹಣ ವಸೂಲಿ ಮಾಡಲು ಬಂದಿದ್ದರು ಎಂದು ಬಿಜೆಪಿಯವರು ಆಧಾರ ರಹಿತ ಟೀಕೆ ಮಾಡುತ್ತಿದ್ದಾರೆ. ಅದನ್ನು ಬಿಟ್ಟು ಅವರು ಬೇರೆ ಏನನ್ನು ಹೇಳಲು ಸಾಧ್ಯ. ಕಾಂಗ್ರೆಸ್‍ನ ನಾಯಕರು ಹಣವನ್ನು ಬ್ಯಾಗಿನಲ್ಲಿ ತುಂಬಿಕೊಂಡು ಹೆಗಲೆ ಮೇಲೆ ಹಾಕಿಕೊಂಡು ಹೋಗಿದ್ದಾರೆಯೇ ? ಸುಮ್ಮನ್ನೆ ಬಾಯಿಗೆ ಬಂದಂತೆ ಮಾತನಾಡಬಾರದು ಎಂದರು ತಿರುಗೇಟು ನೀಡದರು.
10
+ ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಅಕಾರದಲ್ಲಿದ್ದಾಗ ಅವರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಪದೇ ಪದೇ ಬೆಂಗಳೂರಿಗೆ ಬರುತ್ತಿದ್ದರು. ಆಗಲೂ ವಸೂಲಿಗೆ ಬರುತ್ತಿದ್ದರೂ ಎಂದು ಭಾವಿಸಬೇಕಲ್ಲವೇ ಎಂದು ತಿರುಗೇಟು ನೀಡಿದರು.
11
+ ಕಾಂಗ್ರೆಸ್‍ನಲ್ಲಿ ಶಾಸಕರು, ಸಚಿವರು, ನಾಯಕರ ಪೈಕಿ ಸರ್ಕಾರದ ಪರವಾಗಿ ಮಾತನಾಡುವವರಿಗೆ ಅಡ್ಡಿ ಇಲ್ಲ. ಪಕ್ಷ ಅಥವಾ ಸರ್ಕಾರದ ವಿರುದ್ಧ ಮಾತನಾಡಬಾರದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ನಮಗೆ ಹೆಚ್ಚಿನ ಮಾಹಿತಿ ಇಲ್ಲ. ನಮ್ಮನ್ನು ಕರೆಸಿ ಯಾವುದೇ ಚರ್ಚೆ ಮಾಡಿಲ್ಲ, ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತ್ರ ಚರ್ಚೆ ಮಾಡಿದ್ದಾರೆ. ನಿಗಮ ಮಂಡಳಿಯ ನೇಮಕಾತಿ ಬಗ್ಗೆ ಚರ್ಚೆ ನಡೆದಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು.
12
+ ಕನ್ನಡ ಬಾವುಟಕ್ಕೆ ಅಧಿಕೃತ ಸ್ಥಾನ ಮಾನ ದೊರೆಯಬೇಕಿದೆ. ನಿನ್ನೆ ಕೂಡ ಅದು ಚರ್ಚೆಯಾಗುತ್ತಿತ್ತು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಾನ್ಯತೆ ನೀಡುವಂತೆ ಮತ್ತೊಮ್ಮೆ ಪತ್ರ ಬರೆದು ಒತ್ತಡ ಹೇರಲಾಗುವುದು. ಅದನ್ನು ಬಿಟ್ಟು ತಲೆಯ ಮೇಲೆ ಕಲ್ಲು ಇಡಲಾಗುವುದಿಲ್ಲ ಎಂದರು.
13
+ ಕರ್ನಾಟಕ ಪರೀಕ್ಷಾ ಪ್ರಾಕಾರದಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಪೆÇಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಹಿಂದಿನ ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿದ್ದ ಆರ್.ಡಿ.ಪಾಟೀಲ್‍ಗೂ ಕೆಇಎ ಪರೀಕ್ಷೆಯ ಅಕ್ರಮದಲ್ಲಿ ಸಂಪರ್ಕ ಇದೆ ಎಂದು ಹೇಳಲಾಗುತ್ತಿದೆ. ಅದು ನಿಜವಾಗಿದ್ದರೆ ತನಿಖೆಗೆ ಮತ್ತಷ್ಟು ಸಾಕ್ಷ್ಯ ದೊರೆತು ಬೆಂಬಲವಾಗಲಿದೆ. ಮರು ಪರೀಕ್ಷೆ ನಡೆಸಬೇಕು ಎಂಬುದು ಗೃಹ ಇಲಾಖೆ ವ್ಯಾಪ್ತಿಯಲ್ಲಿಲ್ಲ. ಸಂಬಂಸಿದವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
eesanje/url_46_321_1.txt ADDED
@@ -0,0 +1,7 @@
 
 
 
 
 
 
 
 
1
+ ವಿಶ್ವಕಪ್‌ನಿಂದ ಪಾಂಡ್ಯ ಔಟ್..?
2
+ ಮುಂಬೈ, ನ.1- ಪಾದದ ಗಾಯದಿಂದ ಚೇತರಿಸಿಕೊಂಡಿರುವ ಭಾರತದ ಸ್ಟಾರ್ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅವರು ನವೆಂಬರ್ 12 ರಂದು ನೆದಲ್ರ್ಯಾಂಡ್ಸ್ ವಿರುದ್ಧದ ವಿಶ್ವಕಪ್‍ನ ಕೊನೆಯ ಲೀಗ್ ಪಂದ್ಯಕ್ಕೂ ಮುನ್ನ ಕಣಕ್ಕೆ ಮರಳುವ ಸಾಧ್ಯತೆಯಿಲ್ಲ.
3
+ ಅಕ್ಟೋಬರ್ 19 ರಂದು ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಅವರು ಬೌಲಿಂಗ್‍ನಲ್ಲಿ ಚಂಡನ್ನು ತಡೆಯುವಾಗ ಎಡ ಪಾದಕ್ಕೆ ಗಾಯವಾಗಿತ್ತು. ನಂತರ ನಡೆದ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಆಡಲಿಲ್ಲ ನಾಳೆ ಶ್ರೀಲಂಕಾ ಮತ್ತು ನ.5 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
4
+ ನವೆಂಬರ್ 12 ರಂದು ಬೆಂಗಳೂರಿನಲ್ಲಿ ನೆದಲ್ರ್ಯಾಂಡ್ಸ್ ವಿರುದ್ಧ ಭಾರತ ಆಡಲಿರುವ ಕೊನೆಯ ಲೀಗ್ ಪಂದ್ಯಕ್ಕೆ ಪಾಂಡ್ಯ ಲಬ್ಯವಾಗಬಹುದು,ಪ್ರಸ್ತುತ ಅವರು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ನೇರವಾಗಿ ಸೆಮಿಫೈನಲ್ ಪಂದ್ಯ ಆಡುವ ಸಾಧ್ಯತೆಯೂ ಇದೆ. ಈಗಾಗಲೆ ಆರು ಪಂದ್ಯಗಳಲ್ಲಿ ಗೆಲುವು ಪಡೆದು ಭಾರತ ಸೆಮಿಫೈನಲ್‍ಗೆ ಅರ್ಹತೆ ಪಡೆಯುವುದು ನಿಶ್ಛಿತವಾಗಿದೆ.
5
+ ವಾಣಿಜ್ಯ ಸಿಲಿಂಡರ್ ಬೆಲೆ 101 ರೂ. ಏರಿಕೆ
6
+ ಪಾಂಡ್ಯ ಅನುಪಸ್ಥಿತಿಯಲ್ಲಿ, ಭಾರತ ತಂಡ ಐವರು ಬೌಲರ್‍ಗಳೊಂದಿಗೆ ಆಡುತ್ತಿದ್ದು, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ. ಪಾಂಡ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‍ಸಿಎ) ಚೇತರಿಸಿಕೊಳ್ಳುತ್ತಿದ್ದು.ವೈದ್ಯಕೀಯ ತಂಡವು ಪರಿಶೀಲಿಸುತ್ತಿದೆ ನಾವು ಕೂಡ ಎನ್‍ಸಿಎ ಜೊತೆಗೆ ಸಂಪರ್ಕದಲ್ಲಿದ್ದೇವೆ ಒಂದೆರಡು ದಿನಗಳಲ್ಲಿ ಸದ್ಯದ ಪರಿಸ್ಥಿತಿ ಪಡೆಯುವ ನಿರೀಕ್ಷೆಯಲ್ಲಿದ್ದೇವೆ ಎಂದು ಬೌಲಿಂಗ್ ಕೋಚ್ ಮಾಂಬ್ರೆ ಹೇಳಿದ್ದಾರೆ.
7
+ ಬಿಸಿಸಿಐ ಮಾಧ್ಯಮ ಬಿಡುಗಡೆಯ ಪ್ರಕಾರ, ಇಂಗ್ಲೆಂಡ್ ಪಂದ್ಯಕ್ಕೂ ಮುನ್ನ ಪಾಂಡ್ಯ ಲಕ್ನೋದಲ್ಲಿ ತಂಡವನ್ನು ಸೇರಿಕೊಳ್ಳಬೇಕಿತ್ತು ಆದರೆ ಅವರು ತಂಡದಲ್ಲಿ ಇರಲಿಲ್ಲ.
eesanje/url_46_321_10.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಸರ್ಕಾರಿ ಶಾಲೆಗಳಿಗೆ ನೀರು-ವಿದ್ಯುತ್ ಉಚಿತ : ಸಿಎಂ ಘೋಷಣೆ
2
+ ಬೆಂಗಳೂರು, ನ.1- ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
3
+ ಕನ್ನಡ ಶಾಲೆಗಳ ಸೌಲಭ್ಯ ಸುಧಾರಣೆಗೆ ತಮ್ಮ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ ಇಲಾಖೆಯ ಪ್ರಸ್ತಾವನೆ ಆಧರಿಸಿ ಇಂದಿನಿಂದ ಉಚಿತ ವಿದ್ಯುತ್, ನೀರಿನ ಸೌಲಭ್ಯ ಕಲ್ಪಿಸುವುದಾಗಿ ಹೇಳಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
4
+ ದೇವರಾಜು ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಅದರ ಪ್ರಯುಕ್ತ ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ ಎಂಬ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ವರ್ಷ ಪೂರ್ತಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಬಜೆಟ್‍ನಲ್ಲೂ ಕಾರ್ಯಕ್ರಮ ಘೋಷಣೆ ಮಾಡಿ ಅನುದಾನವನ್ನೂ ಮೀಸಲಿಡಲಾಗಿದೆ. ಹಿಂದಿನ ವರ್ಷವೇ ಈ ಕಾರ್ಯಕ್ರಮ ಮಾಡಬೇಕಿತ್ತು. ಆದರೆ ಆಗಿನ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದರು.
5
+ ಈ ದಿನದಿಂದ ನಾವು ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ಮಾಡಬೇಕಿದೆ. ಈ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸಬೇಕು. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು. ನೆರೆ ರಾಜ್ಯದಷ್ಟು ನಾವು ಭಾಷಾಭಿಮಾನಿಗಳಲ್ಲ, ಆದರೆ ಹೆಚ್ಚು ಧಾರಾಳತನ ಅನಗತ್ಯ. ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಸ್ಥಳೀಯ ಅಕೃತ ಭಾಷೆ ಮಾತನಾಡದೆ ಬದುಕಲಾಗಲ್ಲ ಎಂಬ ವಾತಾವಣ ಇದೆ. ಆದರೆ ಕರ್ನಾಟಕದಲ್ಲಿ ಕನ್ನಡ ಮಾತನಾಡದೆ ಬದುಕು ನಡೆಸಬಹುದಾದ ಪರಿಸ್ಥಿತಿ ನಮ್ಮಲ್ಲಿದೆ. ಯಾವ ಭಾಷೆ ಬೇಕಾದರೂ ಕಲಿಯಿತು. ಆದರೆ ನಮ್ಮ ಸಾರ್ವಭೌಮ ಕನ್ನಡ ಭಾಷೆಯನ್ನು ಮಾತನಾಡಿ.
6
+ ಸರ್ಕಾರದಲ್ಲಿ ನಡೆಯುವ ಆಡಳಿತ ಕನ್ನಡ ಭಾಷೆಯಲ್ಲೇ ಆಗಬೇಕು. ಇಲ್ಲಿ ಕೆಲಸ ಮಾಡುವವರು ಕನ್ನಡದಲ್ಲೇ ವ್ಯವಹರಿಸಬೇಕಾಗುತ್ತದೆ. ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ��ಗ ಮಾತ್ರ ಸುಗಮ ಆಡಳಿತ ಸಾಧ್ಯವಾಗಲಿದೆ ಎಂದು ಸೂಚಿಸಿದರು.
7
+ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.
8
+ ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು. ಇಂಗ್ಲಿಷ್‍ನಲ್ಲಿ ಕಲಿತರೆ ಮಾತ್ರ ಜ್ಞಾನ ಸಂಪಾದನೆ ಎಂಬ ನಂಬಿಕೆ ಸರಿಯಲ್ಲ.
9
+ ಮಹತ್ವದ ಮಾಹಿತಿ : ನಿಮ್ಮ ಆಧಾರ್ ಬಯೋಮೆಟ್ರಿಕ್ ಲಾಕ್ ಮಾಡೋದು ಹೇಗೆ..?
10
+ ಕನ್ನಡ ಶಾಲೆಯಲ್ಲಿ ಓದುವ ಮಕ್ಕಳನ್ನು ಇಂಗ್ಲಿಷ್ ಶಾಲೆಗೆ ಸೇರಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದ ಅವರು, ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ. ಕನ್ನಡ ಶಾಲೆಗಳಲ್ಲಿ ಉತ್ತಮ ಕಲಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕನಿಷ್ಠ ಎಸ್‍ಎಸ್‍ಎಲ್‍ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಕಲಿಸಬೇಕು. ಕನ್ನಡದಲ್ಲಿ ಓದಿದ ಅನೇಕರು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನಿಗಳಾಗಿದ್ದಾರೆ ಎಂದರು.
11
+ ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.
12
+ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚಖಾತ್ರಿ ಯೋಜನೆಗಳ ಪೈಕಿ ನಾಲ್ಕು ಯಶಸ್ವಿಯಾಗಿ ಜಾರಿಗೆ ತಂದಿದೆ. ಕನ್ನಡಿಗರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ. ಕನ್ನಡಿಗರು ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಿಸಲು ಅಗತ್ಯ ವಾತಾವರಣ ನಿರ್ಮಿಸಲಾಗುತ್ತಿದೆ ಎಂದರು.
13
+ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಆರ್.ವಿ.ದೇಶಪಾಂಡೆ, ರಿಜ್ವಾನ್ ಹರ್ಷದ್, ವಿಧಾನಪರಿಷತ್ ಸದಸ್ಯ ಅ.ದೇವೇಗೌಡ, ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
14
+ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿದೆ 8 ಅಡಿ ಉದ್ದದ ಚಿನ್ನಲೇಪಿತ ರಾಮಲಲ್ಲಾ ವಿಗ್ರಹ
15
+ ವೇದಿಕೆಯ ಸಮೀಪದಲ್ಲೇ ಪ್ರತಿಷ್ಠಾಪಿಸಿದ್ದ ಕನ್ನಡಾಂಬೆಯ ಪ್ರತಿಮೆಗೆ ಪುಷ್ಟ ನಮನ ಸಲ್ಲಿಸಿದ ಮುಖ್ಯಮಂತ್ರಿಯವರು, ವಿದ್ಯಾರ್ಥಿಗಳ ಪಥ ಸಂಚಲನದ ಗೌರವ ರಕ್ಷೆಯನ್ನು ಸ್ವೀಕರಿಸಿದರು. ಬಳಿಕ ರಾಷ್ಟ್ರ ಹಾಗೂ ಕನ್ನಡ ಧ್ವಜಾರೋಹಣ ನೇರವೇರಿಸಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಲವು ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
eesanje/url_46_321_11.txt ADDED
@@ -0,0 +1,5 @@
 
 
 
 
 
 
1
+ ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವಕ್ಕೆ ಹೈಕೋರ್ಟ್ ಹಸಿರು ನಿಶಾನೆ
2
+ ಬೆಂಗಳೂರು, ಅ.31- ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಡಧ್ವಜ ಹಾರಾಟಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮೈದಾನದಲ್ಲಿ ನಾಡಧ್ವಜ ಹಾರಾಟಕ್ಕೆ ಹಸಿರು ನಿಶಾನೆ ತೋರಿ ಮೂರು ದಿನಗಳ ಸಾಂಸ್ಕøತಿಕ ಕಾರ್ಯಕ್ರಮ ನಡೆಸಲು ಅವಕಾಶ ಕಲ್ಪಿಸಿದ್ದಾರೆ.
3
+ ಗಡಿ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಬೆಂಗಳೂರು, ಅ.31- ರಾಜ್ಯದ ಗಡಿ ಹಾಗೂ ನೆರೆಯ ರಾಜ್ಯಗಳಲ್ಲಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂ ದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೆಎಸ್‍ಆರ್‍ಟಿಸಿ ಬಸ್ಸ್‍ಗೆ ಬೆಂಕಿ ಹಚ್ಚಿರುವುದು ತಪ್ಪು. ಯಾರೇ ಆಗಲಿ ಅಂತಹ ಕೆಲಸ ಮಾಡಬಾರದು. ರಾಜ್ಯದ ಹಿತ ಕಾಪಾಡಲು ನಾವು ಬದ್ಧವಾಗಿದ್ದೇವೆ.
4
+ ರಾಜ್ಯದ ಒಳಗಡೆ ಮತ್ತು ನೆರೆಯ ರಾಜ್ಯಗಳಲ್ಲಿ ಕನ್ನಡಿಗರ ರಕ್ಷಣೆಗೆ ಅಗತ್ಯ ಇರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಪೆÇಲೀಸ್ ಅಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು ಆದೇಶಿಸಲಾಗಿದೆ ಎಂದರು.
5
+ ಬಿಜೆಪಿ ಬರ ಅಧ್ಯಯನ ಮಾಡಲಿ:ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಮಾಡಲಿ ತಪ್ಪೇನಿಲ್ಲ, ಬರ ಪರಿಸ್ಥಿತಿಯನ್ನು ನೋಡಿದ ಬಳಿಕವಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದುಡ್ಡು ಕೊಡಿಸಲಿ ಎಂದು ಆಗ್ರಹಿಸಿದರು.ಕೇಂದ್ರ ಸರ್ಕಾರಕ್ಕೆ ನಮ್ಮ ಕೃಷಿ ಮತ್ತು ಕಂದಾಯ ಸಚಿವರು ಮನವಿ ನೀಡಿದಂತೆ ಪರಿಹಾರ ಕೊಡಿಸಲಿ. ರಾಜ್ಯ ಸರ್ಕಾರ ಮಾನದಂಡಗಳ ಆಧಾರದ ಮೇಲೆಯೇ ಬರ ಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವೂ ರಾಜ್ಯಕ್ಕೆ ಆಗಮಿಸಿ ಅಧ್ಯಯನ ವರದಿ ನೀಡಿದೆ. ಕೇಂದ್ರ ಸರ್ಕಾರ ಸ್ವಲ್ಪ ಲಿಬರಲ್ ಆಗಿ ಪರಿಹಾರ ನೀಡಲಿ. ಬಿಜೆಪಿಯವರು ಬರ ಅಧ್ಯಯನ ಬಳಿಕವಾದರೂ ಕೇಂದ್ರ ಸರ್ಕಾರದಿಂದ ಪರಿಹಾರ ಕೊಡಿಸಲಿ ಎಂದು ಆಗ್ರಹಿಸಿದರು.
eesanje/url_46_321_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಿಜೆಪಿ ಹೇಳಿದ ತಕ್ಷಣ ಸರ್ಕಾರ ಬೀಳಲ್ಲ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಅ.31- ಬಿಜೆಪಿಯವರು ಹೇಳಿದ ತಕ್ಷಣ ನಮ್ಮ ಸರ್ಕಾರ ಬಿದ್ದು ಹೋಗುವುದಿಲ್ಲ. ಸ್ಥಿರತೆಯಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
3
+ ಬಿಜೆಪಿಯ ಶಾಸಕ ರಮೇಶ್ ಜಾರಕಿಹೊಳಿ ನಿನ್ನೆ ಬೆಳಗಾವಿ ಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮುಂದಿನ ಮೂರು ತಿಂಗಳಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿಯಾಗಲಿದ್ದಾರೆ ಎಂದು ಹೇಳಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಬಹಳಷ್ಟು ಮಂದಿ ಸಚಿವರು, ನಾಯಕರು ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
4
+ ಈ ಹಿಂದೆ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ಸೇರಿ ಅನೇಕ ಪಕ್ಷಗಳು ಒಗ್ಗೂಡಿ ಮಹಾವಿಕಾಸ ಅಘಾಡಿ ಸರ್ಕಾರವನ್ನು ರಚಿಸಿದ್ದವು. ಶಿವಸೇನೆಯನ್ನು ಇಬ್ಬಾಗಿಸಿದ ಬಿಜೆಪಿ ಅದರ ನಾಯಕ ಏಕನಾಥ್‍ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿತ್ತು. ಮುಂದುವರೆದ ಭಾಗದಲ್ಲಿ ಎನ್‍ಸಿಪಿಯ ಅಜಿತ್ ಪವಾರ್ ಕೂಡ ಪಕ್ಷದಿಂದ ಹೊರ ಹೋಗಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿದ್ದಾರೆ. ಸರ್ಕಾರ ಪತನವಷ್ಟೆ ಅಲ್ಲ ಮಹಾರಾಷ್ಟ್ರದ ಎರಡು ಪ್ರಬಲ ಪ್ರಾದೇಶಿಕ ಪಕ್ಷಗಳಾದ ಶಿವಸೇನೆ, ಎನ್‍ಸಿಪಿಗಳೇ ಇಬ್ಬಾಗವಾಗಿವೆ.
5
+ ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡ ಕಾಂಗ್ರೆಸ್, ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಭಾರೀ ಬಹುಮತವಿದ್ದರೂ ಅದನ್ನು ಕದಲಿಸಲು ಒಳಗೊಳಗೆ ಸಂಚುಗಳು ನಡೆಯುತ್ತಿವೆ ಎಂಬ ವದ್ಧಂತಿಗಳು ವ್ಯಾಪಕವಾಗಿವೆ.
6
+ ನನ್ನ ಶಕ್ತಿಯ ಮೂಲ ನನ್ನ ಅಜ್ಜಿ : ರಾಹುಲ್‍ ಗಾಂಧಿ
7
+ ಇತ್ತೀಚೆಗೆ ಕಾಂಗ್ರೆಸ್‍ನ ಮಂಡ್ಯ ಕ್ಷೇತ್ರದ ಶಾಸಕ ಗಣಿಗ ರವಿ ದಾವಣಗೆರೆಯಲ್ಲಿ ಹೇಳಿಕೆ ನೀಡಿ ಬಿಜೆಪಿಯವರು ಕಾಂಗ್ರೆಸ್‍ನ ನಾಲ್ವರು ಶಾಸಕರನ್ನು ಭೇಟಿ ಮಾಡಿ 50 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನ ನೀಡುವ ಆಮಿಷವೊಡ್ಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದ್ದರು. ಮೂಲಗಳ ಪ್ರಕಾರ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡ 66 ಶಾಸಕರ ಪಟ್ಟಿಯನ್ನು ಬಿಜೆಪಿ ನಾಯಕರು ತಯಾರು ಮಾಡಿಕೊಂಡಿದ್ದು, ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದ್ದಾರೆ ಎಂಬ ಆರೋಪಗಳಿವೆ.
8
+ ಇದಕ್ಕೆ ಪೂರಕವಾಗಿ ಬಿಜೆಪಿಯ ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರು ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎನ್ನುತ್ತಿದ್ದಾರೆ. ಇತ್ತೀಚೆಗಷ್ಟ�� ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‍ನ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ ಶೀಘ್ರವೇ ಪತವಾಗಲಿದೆ ಎಂದಿದ್ದರು. ತಮ್ಮ ಸರ್ಕಾರವನ್ನು ಪತನಗೊಳಿಸುವ ಸಂಚು ನಡೆದಿರುವುದನ್ನು ಖುದ್ದು ಮುಖ್ಯಮಂತ್ರಿಯವರೂ ಒಪ್ಪಿಕೊಂಡಿದ್ದರು.
9
+ ಸರ್ದಾರ್ ಪಟೇಲ್‌ಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ
10
+ ಇಂದು ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ವಿಧಾನಸೌಧದಲ್ಲಿ ಪ್ರತಿಜ್ಞಾವಿ ಬೋಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿಯವರು, ಬಿಜೆಪಿಯವರ ಹೇಳಿಕೆಗಳಿಗೆ ಉಪ್ಪು ಖಾರ ಹಾಕಲಾಗುತ್ತಿದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದರು. ನಮ್ಮ ಸರ್ಕಾರ ಸ್ಥಿರತೆಯಿಂದ ಕೂಡಿದೆ. ಬಿಜೆಪಿಯವರು ಹೇಳಿದ ತಕ್ಷಣ ಸರ್ಕಾರ ಬಿದ್ದು ಹೋಗಲು ಸಾಧ್ಯವಿಲ್ಲ ಎಂದು ದೃಢವಾಗಿ ಹೇಳಿದರು.
eesanje/url_46_321_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕರುನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಗಣ್ಯರಿಂದ ಶುಭಾಶಯ
2
+ ಬೆಂಗಳೂರು,ನ.1- ಕನ್ನಡ ಭಾಷಿಕರು, ಪ್ರದೇಶ ಏಕೀಕರಣವಾದ ರಾಜ್ಯೋತ್ಸವ ಸಡಗರ ಹಾಗೂ ಕರ್ನಾಟಕ ಎಂಬ ಮರು ನಾಮಕರಣವಾಗಿ 50ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಸುವರ್ಣ ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದೆ.
3
+ ಕನ್ನಡಿಗರ ಅಸ್ತಿತ್ವ ಮತ್ತು ಆಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಬಾವುಟ ಇಂದು ರಾಜ್ಯದೆಲ್ಲೆಡೆ ಹಾರಾಡುತ್ತಿದ್ದು, ಎಲ್ಲೆಡೆ ಕನ್ನಡ ಡಿಂಡಿಮ ಮೊಳಗಲಿದೆ. ಈ ಸುದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಗಣ್ಯರು ಸಾಮಾಜಿಕ ಜಾಲತಾಣ ಮೂಲಕ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ.
4
+ ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದಿರುವ ಸಿಎಂ ಸಿದ್ದರಾಮಯ್ಯ, ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ.
5
+ ಸರ್ಕಾರಿ ಶಾಲೆಗಳಿಗೆ ನೀರು-ವಿದ್ಯುತ್ ಉಚಿತ : ಸಿಎಂ ಘೋಷಣೆ
6
+ 1973ರ ನವೆಂಬರ್ 1ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡ ಭಾಷೆಯಷ್ಟೇ ಸೀಮಿತ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದಿದ್ದಾರೆ.ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷ ಪೂರೈಸಿದ್ದು, ಕನ್ನಡದ ಅಸ್ಮಿತೆಯ ಉಳಿವಿಗಾಗಿ ಹಾಗೂ ಕನ್ನಡಿಗರ ಏಳಿಗೆಗಾಗಿ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಹೀಗೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶುಭಕೋರಿದರು.
7
+ ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ 68ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, ಕರ್ನಾಟಕವೆಂದು ಹೆಸರಾಗಿ ಇಂದಿಗೆ 50 ವರ್ಷ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆ ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆ ಯನ್ನು ಮುಗಿಲೆತ್ತರಕ್ಕೆ ಹಾರೈಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿ ಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
8
+ ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ : ಡಿಸಿಎಂ
9
+ ಮಾಜ�� ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು ಎಂದು ಶುಭಾಶಯ ಕೋರಿದ್ದಾರೆ.
10
+ ವಿಶ್ವದ ಸಮಸ್ತ ಕನ್ನಡಿಗರಿಗೆ 68ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಕರ್ನಾಟಕ..! ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು. ಜಗದಗಲ ಹಬ್ಬಲಿ ಕರ್ನಾಟಕ ಸಂಭ್ರಮ, ಮೊಳಗಲಿ ಕನ್ನಡ ಡಿಂಡಿಮ. ವಿಶ್ವದಾದ್ಯಂತ ನೆಲೆಸಿರುವ ಸಮಸ್ತ ಹೆಮ್ಮೆಯ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.
eesanje/url_46_321_3.txt ADDED
@@ -0,0 +1,7 @@
 
 
 
 
 
 
 
 
1
+ ಕನ್ನಡಿಗರಿಗೆ ರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ ಮೋದಿ
2
+ ನವದೆಹಲಿ, ನ.1- ಅರವತ್ತೆಂಟನೆ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರುನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
3
+ ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು…
4
+ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೋದಿ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ.
5
+ ಸರ್ಕಾರಿ ಶಾಲೆಗಳಿಗೆ ನೀರು-ವಿದ್ಯುತ್ ಉಚಿತ : ಸಿಎಂ ಘೋಷಣೆ
6
+ ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಪೋರ್ತಿಯಾಗಲಿ ಎಂದು ಹಾರೈಸಿದ್ದಾರೆ.
7
+ ಕನ್ನಡಿಗರು ಫಿದಾ:ಕರ್ನಾಟಕ ರಚನೆಯಾಗಿ 50ನೆ ವರ್ಷದ ಸುವರ್ಣ ಮಹೋತ್ಸವಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲೇ ಬಂದಿರುವ ಈ ಬಾರಿಯ ಕನ್ನಡ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ಕೋರಿರುವುದಕ್ಕೆ ನಾಡಿನ ಜನ ಫಿದಾ ಆಗಿದ್ದಾರೆ.
eesanje/url_46_321_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಕರಾಳ ದಿನಾಚರಣೆ ಮಾಡುವವರಿಗೆ ತಾಯಿನೆಲದ ತಿಳುವಳಿಕೆ ಬೇಕು : ಸತೀಶ್ ಜಾರಕಿಹೊಳಿ
2
+ ಬೆಂಗಳೂರು, ನ.1- ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರಾಳ ದಿನ ಆಚರಣೆ ಮಾಡುವವರಿಗೆ ತಾಯ್ನೆಲದ ಬಗ್ಗೆ ತಿಳುವಳಿಕೆ ಅಗತ್ಯ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
3
+ ಬೆಳಗಾವಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆಯವರು ಸರ್ಕಾರದ ಅನುಮತಿ ಇಲ್ಲದೆಯೂ ಕರಾಳ ದಿನಾಚರಣೆ ಮಾಡುತ್ತಾರೆ. ಇಲ್ಲಿಯೇ ವಾಸ ಮಾಡುವ ಅವರಿಗೆ ತಿಳುವಳಿಕೆ ಬರಬೇಕು. ಹಕ್ಕುಗಳಿಗಾಗಿ ಭಾಷಣ ಮಾಡಲಿ, ಆದರೆ ಸರ್ಕಾರವನ್ನು ವಿರೋಧ ಮಾಡುವುದು ಸರಿಯಲ್ಲ ಎಂದರು.
4
+ ಯಾವುದೇ ಕಾರ್ಯಕ್ರಮವಾದರೂ ರಕ್ಷಣೆ ನೀಡುವುದು ಪೊಲೀಸರ ಜವಾಬ್ದಾರಿ. ಒಂದು ವೇಳೆ ರಕ್ಷಣೆ ನೀಡದೆ ಇದ್ದರೆ ಗಲಾಟೆಯಾದರೆ ಯಾರು ಹೊಣೆ ಅದಕ್ಕಾಗಿ ರಕ್ಷಣಾ ವ್ಯವಸ್ಥೆ ಮಾಡಲಾಗುತ್ತದೆ. ಅದನ್ನು ಎಂಇಎಸ್‍ಗೆ ರಕ್ಷಣೆ ಎಂದು ಬಿಂಬಿಸಬೇಕಿಲ್ಲ ಎಂದರು.
5
+ ಸರ್ಕಾರ ನಾಡ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತದೆ. ಆದರೆ ಪ್ರಕರಣ ನ್ಯಾಯಾಲಯಕ್ಕೆ ಹೋದ ಮೇಲೆ ನಾವು ಏನು ಮಾಡಲಾಗುವುದಿಲ್ಲ. ನ್ಯಾಯಾಲಯದಲ್ಲಿ ಜಾಮೀನು ದೊರೆಯುತ್ತದೆ, ಕೆಲವೊಮ್ಮೆ ಪ್ರಕರಣವು ವಜಾಗೊಳ್ಳುತ್ತದೆ ಎಂದರು.
6
+ ಸರ್ಕಾರಿ ಶಾಲೆಗಳಿಗೆ ನೀರು-ವಿದ್ಯುತ್ ಉಚಿತ : ಸಿಎಂ ಘೋಷಣೆ
7
+ ಈ ಬಾರಿ ಮುನ್ನೆಚ್ಚರಿಕೆಯಾಗಿ 35 ಜನರನ್ನು ಬಂಧಿಸಲಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿದ್ದ ಪೊಲೀಸ್ ಅಧಿಕಾರಿ ಸಚಿವರಿಗೆ ಮಾಹಿತಿ ನೀಡಿದರು. ಮುಂದುವರೆದ ಸಚಿವ ಸತೀಶ್ ಜಾರಕಿಹೊಳಿ, ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಯಾಗಬೇಕು ಎಂಬುದು ಎಲ್ಲಾ ಕಡೆಯಿಂದ ಪಕ್ಷಾತೀತವಾಗಿ ಬೇಡಿಕೆಯಾಗಿದೆ. ಆದರೆ ಅದಕ್ಕೂ ಮಹೂರ್ತ ಕೂಡಿ ಬರಬೇಕು, ಹಣಕಾಸು ಲಭ್ಯತೆ ನೋಡಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
8
+ ಜಿಲ್ಲಾ ವಿಭಜನೆಗೂ ಮೊದಲು ಬೆಳಗಾವಿ ತಾಲ್ಲೂಕು ವಿಭಜನೆಯಾಗಬೇಕಿದೆ. ಪ್ರಸ್ತುತ ತಾಲ್ಲೂಕಿನಲ್ಲಿ ಎಂಟುವರೆ ಲಕ್ಷ ಮತದಾರರಿದ್ದಾರೆ. 11 ಲಕ್ಷ ಜನಸಂಖ್ಯೆ ಇದೆ. ನಿಗದಿತ ಪ್ರಮಾಣಕ್ಕಿಂತಲೂ ಶೇ.20ರಷ್ಟು ಹೆಚ್ಚು ಜನಸಂಖ್ಯೆ ಇದೆ. ಉಡುಪಿ ಜಿಲ್ಲೆಯಲ್ಲಿ ಎಂಟು ಲಕ್ಷ ಜನಸಂಖ್ಯೆ ಇದ್ದರೇ ಅದಕ್ಕಿಂತಲೂ ಹೆಚ್ಚು ಜನ ಬೆಳಗಾವಿ ತಾಲ್ಲೂಕಿನಲ್ಲಿ ವಾಸಿಸುತ್ತಿದ್ದಾರೆ. ಆದಷ್ಟು ಶೀಘ್ರ ತಾಲ್ಲೂಕು ವಿಭಜನೆ ಮಾಡಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಚಿವ ಸಂಪುಟ ಸಭೆಯಲ್ಲಿ ಮನವಿ ಮಾಡಿದ್ದಾರೆ ಎಂದರು.
9
+ ಬೆಳಗಾವಿ ನಗರ ಒಂದು ತಾಲ್ಲೂಕು ಆಗಲಿದೆ, ಬೆಳಗಾವಿ ಗ್ರಾಮೀಣ ಪ್ರತ್ಯೇಕ ತಾಲ್ಲೂಕು ಆಗಲಿದೆ. ಬೆಳಗಾವಿ ಮಹಾನಗರ ಪಾಲಿಕೆಗೆ 12 ಗ್ರಾಮ ಪಂಚಾಯತ್‍ಗಳನ್ನು ಸೇರ್ಪಡೆ ಮಾಡಲಾಗುವುದು ಎಂದರು.
eesanje/url_46_321_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮುಂದಿನ ಅಧಿವೇಶನಕ್ಕೆ ಬಿಜೆಪಿ ಶಾಸಕಾರು ಗೈರು..?
2
+ ಬೆಂಗಳೂರು,ನ.1- ಕೂಡಲೇ ವಿಧಾನಸಭೆ ಹಾಗೂ ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡದಿದ್ದರೆ ಬೆಳಗಾವಿ ಅಧಿವೇಶನಕ್ಕೆ ಗೈರು ಹಾಜರಾಗುವುದಾಗಿ ಬಿಜೆಪಿ ಶಾಸಕರು ಬೆದರಿಕೆ ಹಾಕಿದ್ದಾರೆ. ಮಂಗಳವಾರ ಸಂಜೆ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಹುತೇಕ ಶಾಸಕರು ಬೆಳಗಾವಿ ಅಧಿವೇಶನ ಆರಂಭವಾಗುವುದರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಸದನಕ್ಕೆ ಹೋಗುವುದೇಕೆ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.
3
+ ನಾವು ವರಿಷ್ಠರ ವಿರುದ್ಧವಾಗಿ ನಡೆದುಕೊಳ್ಳುತ್ತಿಲ್ಲ. ಆದರೆ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಆರು ತಿಂಗಳು ಮುಗಿಯುತ್ತಾ ಬಂದಿದೆ. ಈವರೆಗೂ ವಿಧಾನಸಭೆ ಹಾಗೂ ವಿಧಾನಪರಿಷತ್‍ಗೆ ಪ್ರತಿಪಕ್ಷದ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡಿಲ್ಲ ಎಂದರೆ ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾದರೂ ಹೇಗೆ ಎಂದು ಬಿಎಸ್‍ವೈ ಬಳಿ ಅನೇಕ ಶಾಸಕರು ಅಳಲು ತೋಡಿಕೊಂಡಿದ್ದಾರೆ.
4
+ ಆಡಳಿತ ಪಕ್ಷದವರು ಪ್ರತಿ ಹಂತದಲ್ಲೂ ನಮ್ಮನ್ನು ಸದನದ ಒಳಗೆ ಮತ್ತು ಹೊರಗೂ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡುವ ಯೋಗ್ಯತೆ ಇಲ್ಲದವರು ಎಂದು ಟೀಕಿಸುತ್ತಾರೆ. ಒಂದೊಂದು ವೈಫಲ್ಯವನ್ನು ಮುಂದಿಡಲು ಮುಂದಾಗುತ್ತಿದ್ದಂತೆ ಈ ಪ್ರಶ್ನೆಯನ್ನೇ ಮುಂದಿಟ್ಟು ನಮ್ಮ ಬಾಯಿ ಮುಚ್ಚಿಸುತ್ತಾರೆ ಎಂದು ಶಾಸಕರು ಹೇಳಿಕೊಂಡಿದ್ದಾರೆ.
5
+ ಶಾಸಕರ ನೋವಿಗೆ ದನಿಗೂಡಿಸಿರುವ ಯಡಿಯೂರಪ್ಪ , ಹಿಂದೆ ನಾನು ದೆಹಲಿಗೆ ಭೇಟಿ ನೀಡಿದ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತಕ್ಷಣವೇ ವಿಧಾನಸಭೆ ಹಾಗೂ ಪ್ರತಿಪರಿಷತ್‍ಗೆ ಸೂಕ್ತರಾದವರನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದ್ದೆ. ಎಷ್ಟು ಸಾಧ್ಯವೋ ಅಷ್ಟು ಬೇಗ ಆಯ್ಕೆ ಮಾಡುವ ಆಶ್ವಾಸನೆ ಕೊಟ್ಟಿದ್ದರು. ಆದರೂ ಈಗಲೂ ಮಾಡದಿರುವುದು ವೈಯಕ್ತಿಕವಾಗಿ ನನಗೂ ಬೇಸರ ತಂದಿದೆ ಎಂದು ಹೇಳಿದ್ದಾರೆ.
6
+ ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಅಧಿಕಾರ ಅವಧಿ ಮುಗಿದು ಹಲವು ತಿಂಗಳೇ ಕಳೆದಿದೆ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಅರ್ಹರನ್ನೇ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಮನವಿ ಮಾಡಲಾಗಿತ್ತು. ಇದರ ಬಗ್ಗೆಯೂ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.ಸರ್ಕಾರವನ್ನು ಪ್ರಶ್ನಿಸಲು ಅನೇಕ ಹಗರಣಗಳಿವೆ. ಸದನದಲ್ಲಿ ನಾವು ಇದರ ಬಗ್ಗೆ ಗಟ್ಟಿಯಾಗಿ ದನಿ ಎತ್ತಬೇಕು. ಆದರೆ ನಮ್ಮಲ್ಲಿ ಪ್ರತಿಪಕ್ಷದ ನಾಯಕ ಇಲ್ಲದಿರುವಾಗ ನಾವು ಯಾರ ಸಾರಥ್ಯದಲ್ಲಿ ಸದನದೊಳಗೆ ಹೋರಾಟ ನಡೆಸಬೇಕು ಎಂಬುದೇ ಗೊತ್ತಾಗುತ್ತಿಲ್ಲ.
7
+ ಜೈಲಿನಿಂದ ಬಿಡುಗಡೆಯಾಗಿ ಮನೆ ಸೇರಿದ ಚಂದ್ರಬಾಬು ನಾಯ್ಡು
8
+ ಎಷ್ಟು ದಿನ ನಾವು ಸದನದಲ್ಲಿ ಸರ್ಕಾರದಿಂದ ಕುಹುಕ, ವ್ಯಂಗ್ಯ ಮಾತುಗಳನ್ನು ಕೇಳಬೇಕು, ಸದನದಲ್ಲಿ ಸ್ವಾಭಿಮಾನ ಬಿಟ್ಟು ಕೂರಬೇಕೆ ಎಂದು ಬಿಎಸ್‍ವೈ ಬಳಿ ಬೆಂಗಳೂರಿನ ಹಿರಿಯ ಶಾಸಕರೊಬ್ಬರು ನೋವು ಹೊರಹಾಕಿದ್ದಾರೆ.
9
+ ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ಅವೇಶನ ಮುಗಿದಿದೆ. ಅಧಿಕೃತ ವಿರೋಧ ಪಕ್ಷದ ನಾಯಕ ಇಲ್ಲದಿದ್ದರೆ ಬೆಳಗಾವಿ ಅವೇಶನಕ್ಕೆ ಹೋಗುವುದರಲ್ಲಿ ಅರ್ಥವೇ ಇಲ್ಲ. ತಕ್ಷಣವೇ ದೆಹಲಿ ನಾಯಕರ ಬಳಿ ಚರ್ಚಿಸಿ ಇದಕ್ಕೊಂದು ಅಂತ್ಯ ಹಾಡಬೇಕೆಂದು ಶಾಸಕರು ಕೇಳಿಕೊಂಡಿದ್ದಾರೆ.
10
+ ನವೆಂಬರ್ ತಿಂಗಳ ಅಂತ್ಯದೊಳಗೆ ಈ ಪ್ರಕ್ರಿಯೆ ಮುಗಿಯದಿದ್ದರೆ ಬೆಳಗಾವಿ ಅಧಿವೇಶನಕ್ಕೆ ನಾವು ಹೋಗುವುದೇ ಇಲ್ಲ. ನಮ್ಮನ್ನು ಮುಜುಗರ ಮಾಡಬೇಕೆಂಬ ಉದ್ದೇಶ ರಾಷ್ಟ್ರೀಯ ನಾಯಕರಿಗಿದ್ದರೆ ನಾವು ಏನೂ ಮಾಡಲು ಆಗುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.
11
+ ಶಾಸಕರು ಇದರ ಬಗ್ಗೆ ಬಹಿರಂಗ ಹೇಳಿಕೆ ಕೊಡುವ ಅಗತ್ಯವಿಲ್ಲ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಕಾರಣ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ನಾನೇ ದೆಹಲಿಗೆ ತೆರಳಿ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇನೆ. ಎಲ್ಲವೂ ಸುಖಾಂತ್ಯ ಕಾಣಲಿದೆ ಎಂದು ಬಿಎಸ್‍ವೈ ಶಾಸಕರಿಗೆ ಆಶ್ವಾಸನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
eesanje/url_46_321_6.txt ADDED
@@ -0,0 +1,7 @@
 
 
 
 
 
 
 
 
1
+ ಕೊನೆಗೂ ಸೆರೆಸಿಕ್ಕ ಚಿರತೆ, ನಿಟ್ಟುಸಿರುಬಿಟ್ಟ ನಾಗರಿಕರು
2
+ ಬೆಂಗಳೂರು,ನ.1- ನಗರದ ಹೊರವಲಯದಲ್ಲಿ ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದು, ಸುತ್ತಮುತ್ತಲ ನಾಗರಿಕರು ನಿಟ್ಟುಸಿರು ಬಿಟ್ಟಿದ್ದಾರೆ.ಸೆರೆಸಿಕ್ಕ ಚಿರತೆಯನ್ನು ಅರಣ್ಯಾಧಿಕಾರಿಗಳು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲಿದ್ದಾರೆ. ಇಂದು ಮುಂಜಾನೆಯಿಂದಲೇ ಈ ಚಿರತೆಯ ಸೆರೆಗಾಗಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು.
3
+ ಅರವಳಿಕೆ ಚುಚ್ಚುಮದ್ದು ನೀಡಲು ಪಶು ವೈದ್ಯಾಧಿಕಾರಿ ಮುಂದಾಗುತ್ತಿದ್ದಂತೆ ಚಿರತೆ ಇವರ ಮೇಲೆ ದಾಳಿ ಮಾಡಿದೆ. ಇವರ ಕುತ್ತಿಗೆ ಭಾಗದಲ್ಲಿ ಗಾಯವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಇದಾದ ಕೆಲವೇ ನಿಮಿಷಗಳ ನಂತರ ಚಿರತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಪ್ರೇ ಮಾಡಲು ಮುಂದಾದಾಗ ಅವರ ಮೇಲೂ ಚಿರತೆ ದಾಳಿ ಮಾಡಿದ್ದು, ಗಾಯಗೊಂಡಿರುವ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ.
4
+ ಕಳೆದ ಶನಿವಾರ ಬೊಮ್ಮನಹಳ್ಳಿಯ ಕೂಡ್ಲುಗೇಟ್ ಸಮೀಪದ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದ ಪಾಳು ಮನೆಯೊಂದರಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡಿದ್ದ ಸ್ಥಳೀಯ ಜನತೆ ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.
5
+ ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ : ಡಿಸಿಎಂ
6
+ ಚಿರತೆ ಇದ್ದ ಪಾಳು ಮನೆ ಸುತ್ತಮುತ್ತ ಎರಡು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಪೊದೆ ಬೆಳೆದುಕೊಂಡಿದ್ದರಿಂದ ಅದನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಚಿರತೆ ಓಡಾಡುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ ಚಿರತೆ ಬಹಿರಂಗವಾಗಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಬೇಟೆಗಾಗಿ ಹರಸಾಹಸ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
7
+ ಹೀಗಾಗಿ ಚಿರತೆ ಹುಡುಕಾಟಕ್ಕಾಗಿ ಮೈಸೂರು ಅರಣ್ಯ ಇಲಾಖೆಯ ವಿಶೇಷ ತಂಡವನ್ನು ಕರೆಸಿಕೊಳ್ಳಲಾಗಿತ್ತು. ಅರಣ್ಯ ವಿಭಾಗದ ಎಲ್ಲ ತಂಡಗಳು ಸತತ ಕಾರ್ಯಾಚರಣೆ ನಡೆಸಿ ಕೊನೆಗೂ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿವೆ.
eesanje/url_46_321_7.txt ADDED
@@ -0,0 +1,7 @@
 
 
 
 
 
 
 
 
1
+ ಶಾಸಕರಿಗೆ 50 ಕೋಟಿ ಆಮಿಷವೊಡ್ಡಿದ್ದು ಯಾರೆಂದು ಬಹಿರಂಗಪಡಿಸಿ : ಯತ್ನಾಳ್ ಸವಾಲ್
2
+ ವಿಜಾಪುರ,ನ.1- ನಮ್ಮ ಪಕ್ಷದ ಯಾರೊಬ್ಬರೂ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸೇರುವಂತೆ 50 ಕೋಟಿ ಹಣದ ಆಮಿಷವೊಡ್ಡಿರುವ ಆಡಿಯೋ ಇಲ್ಲವೆ ವಿಡಿಯೋಗಳಿದ್ದರೆ ಕೂಡಲೇ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರಿಗೆ ರಾಜ್ಯದ ಜನತೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ಆಡಳಿತ ನಡೆಸಲು ಆಗದವರು ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆಪರೇಷನ್ ಕಮಲದ ಹುಸಿ ಸುದ್ದಿಯನ್ನು ತೇಲಿಬಿಟ್ಟಿದ್ದಾರೆ. ಒಂದು ವೇಳೆ ಶಾಸಕರಿಗೆ ಹಣದ ಆಮಿಷವೊಡ್ಡಿರುವ ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಹಿಂದೇಟು ಏಕೆ ಎಂದು ಪ್ರಶ್ನೆ ಮಾಡಿದರು.
4
+ 100, 50 ಕೋಟಿ ಎಂದು ಹೇಳುತ್ತಿರುವವರು ಮಾರುಕಟ್ಟೆಯಲ್ಲಿ ತಮ್ಮ ಬೇಡಿಕೆಯನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ಯಾರಾದರೂ ಕರೆಯಲಿ ಎಂದು ಇವರೇ ಹಣದ ಅಂತೆಕಂತೆಗಳನ್ನು ಸೃಷ್ಟಿಸುತ್ತಿದ್ದಾರೆ. ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಹಿಂದೇಟು ಏಕೆ? ಇನ್ನು ಯಾವುದಾದರೂ ಮುಹೂರ್ತ ಕೂಡಿಬರಬೇಕೇ ಎಂದು ಪರೋಕ್ಷವಾಗಿ ಶಾಸಕ ರವಿ ಗಾಣಿಗ ವಿರುದ್ಧವೂ ವಾಗ್ದಾಳಿ ನಡೆಸಿದರು.
5
+ ಇಟಲಿಯಿಂದ ಪಂಜಾಬ್‍ಗೆ ಬಂದು ಪತ್ನಿ ಕೊಂದ ಅನಿವಾಸಿ ಭಾರತೀಯ
6
+ ಯಾವುದೇ ಕಾರಣಕ್ಕೂ ನಾವು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುವುದಿಲ್ಲ. ಈಗಾಗಲೇ 5 ತಿಂಗಳಲ್ಲಿ ಸರ್ಕಾರದ ಹಣೆಬರಹ ಏನೆಂಬುದು ಜನತೆಗೆ ಗೊತ್ತಾಗಿದೆ. ನನ್ನ ರಾಜಕೀಯ ಅನುಭವದಲ್ಲಿ ಹೇಳುವುದಾದರೆ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದ ಮಹಾನ್ ನಾಯಕರೊಬ್ಬರು ಮಧ್ಯವರ್ತಿಗಳನ್ನು ಮುಂದಿಟ್ಟುಕೊಂಡು ಸಿ.ಡಿ ನಾಟಕ ಮಾಡಿದರು.
7
+ ಕಾಂಗ್ರೆಸ್ ಪಕ್ಷದಲ್ಲಿ ಸಿ.ಡಿ ತಯಾರಿಸುವ ಕಂಪನಿಯೇ ಇದೆ. ಇದಕ್ಕೆ ಪ್ರಮುಖ ನಾಯಕರೊಬ್ಬರು ಮುಖ್ಯಸ್ಥರೆಂದು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಆಡಳಿತ ನಡೆಸಲು ಅವಕಾಶ ನೀಡದ ಕೆಲವರು ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಬೇಕೆಂದು ಹವಣಿಸುತ್ತಿದ್ದಾರೆ. ಕುರ್ಚಿ ಸಿಗುವುದಿಲ್ಲ ಎಂಬುದು ಗೊತ್ತಾಗುತ್ತಿದ್ದಂತೆ ತಮ್ಮ ಬೆಂಬಲಿಗರ ಮೂಲಕ ಆಪರೇಷನ್ ಕಮಲ ಕೃಪಾಪೊಷಿತ ನಾಟಕವನ್ನು ಮಾಧ್ಯಮದ ಮುಂದೆ ಬಿಡುತ್ತಾರೆ. ಎಲ್ಲವೂ ಸದ್ಯದಲ್ಲೇ ಬಹಿರಂಗವಾಗಲಿದೆ. ಕಾದು ನೋಡಿ ಎಂದು ಯತ್ನಾಳ್ ಹೇಳಿದರು.
eesanje/url_46_321_8.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ : ಡಿಸಿಎಂ
2
+ ಬೆಂಗಳೂರು, ನ.1- ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು. ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
3
+ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಸರಾಯಿತು ಕರ್ನಾಟಕ ಉಸಿರಾಯಿತುಕನ್ನಡ, ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ತುಂಬಿದ ಸಂದರ್ಭದಲ್ಲಿ ಕನ್ನಡಿಗರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದರು.
4
+ ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲಿ ಚೂಡಾಮಣಿ ಆಗು, ಕನ್ನಡ ಜ್ಯೋತಿ ಬೆಳಗು ಜಗಕೆಲ್ಲ ಎಂಬ ಕವಿವಾಣಿಯನ್ನು ಸ್ಮರಿಸಿಕೊಂಡ ಅವರು, ಕನ್ನಡ.. ಕನ್ನಡಿಗ..ಕರ್ನಾಟಕ… ಈ ಮೂರಕ್ಕೂ ನವೆಂಬರ್ 1 ಕ್ಕೂ ಬಿಡಿಸಲಾರದ ನಂಟು. ಆದರೆ ಕನ್ನಡದ ಅಭಿಮಾನ ಬರೀ ನವೆಂಬರ್ 1 ಕ್ಕೆ ಸೀಮಿತ ಆಗದಿರಲಿ. ಕನ್ನಡ ಹೃದಯದ ಭಾಷೆಯಾಗಲಿ, ಕನ್ನಡ ಮನಸ್ಸಿನ ಭಾಷೆಯಾಗಲಿ ಎಂದರು.
5
+ ಅನೇಕ ಹಿರಿಯರು ಕನ್ನಡದ ಬಗ್ಗೆ ವಿವಿಧ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಅಂಕುಶದಿಂದ ಚುಚ್ಚಿದರೂ ನಾನು ಹುಟ್ಟಿದ ಊರನ್ನು ಮರೆಯುವುದಿಲ್ಲ ಎಂದು ಪಂಪ ಹೇಳಿದ್ದಾರೆ. ಕುರಾನಿನಲ್ಲಿ ಹೇಳುತ್ತಾರೆ, ಸ್ವರ್ಗವು ತಂದೆ-ತಾಯಿಯ ಪಾದದ ಕೆಳಗೆ ಇದೆ ಎಂದು. ಅಂದರೆ ತಂದೆ-ತಾಯಿ ಸ್ಪರ್ಶಿಸಿದ ನೆಲವೇ ಸ್ವರ್ಗ ಎಂದು. ನಮಗೆ ಆ ಸ್ವರ್ಗ ಕರ್ನಾಟಕ. ತುಂಗಾ, ಭದ್ರಾ, ಕೃಷ್ಣ, ಕಾವೇರಿ ಹರಿಯುವ ಈ ತಾಯಿ ನೆಲವೇ ನಮಗೆ ಸ್ವರ್ಗ ಎಂದರು.
6
+ ಕನ್ನಡದಲ್ಲಿ ಬೇಡಿಕೊಂಡರೆ ಹರಿ ವರಗಳ ಮಳೆ ಗರೆಯುತ್ತಾನೆ. ಹರ ಮುನಿಯದೆ ಪೊರೆಯುತ್ತಾನೆ ಎಂದು ಕುವೆಂಪು ಹೇಳುತ್ತಾರೆ. ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಲಕ್ಷಾಂತರ ಜನರನ್ನ ನೆನೆಯೋಣ ಎಂದು ಕರೆ ನೀಡಿದ ಅವರು, 2000 ವರ್ಷಗಳ ಇತಿಹಾಸ ಇರುವ ಕನ್ನಡ ಮರೆತರೆ ತಾಯಿಯನ್ನು ಮರೆತಂತೆ ಎಂದು ನಾವು ಅರಿಯಬೇಕಿದೆ ಎಂದರು.
7
+ ನಾವು ಕೋಮು ದ್ವೇಷಕ್ಕೆ ಸಿಲುಕದೆ, ಕರ್ನಾಟಕದ ಮನಸ್ಸುಗಳನ್ನು ಒಡೆಯದೇ ಯಾವ ಹೊರಗಿನ ಶಕ್ತಿಗೂ ಹೆದರದೆ ಒಂದಾಗಿ ಬದುಕುತ್ತೇವೆ. ಸರ್ವಜನಾಂಗದ ಶಾಂತಿಯ ತೋಟ ಮರಳಿ ನಿರ್ಮಿಸುತ್ತೇವೆ ಎಂಬ ದೀಕ್ಷೆ ತೊಡೋಣ. ಬಹಳಷ್ಟು ಮಂದಿಯ ತ್ಯಾಗ ಮತ್ತು ಬಲಿದಾನದ ಫಲವೇ ಅಖಂಡ ಕರ್ನಾಟಕ. ಇದನ್ನು ಜೋಪಾನವಾಗಿ ಕಾಪಾಡಬೇಕು ಎಂದರು.
8
+ ನಾವು ಹುಟ್ಟಿದ ನಂತರ ಮಾತು ಕಲಿಯಲು ಎರಡು ವರ್ಷ ಬೇಕು. ಆದರೆ ಯಾವುದನ್ನು ಆಡಬಾರದು ಎಂಬುದನ್ನು ಕಲಿಯಲು ಇಡೀ ಜೀವಮಾನ ಸಾಲದು. ಕುವೆಂಪು ಅವರು ಹೇಳಿದಂತೆ ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ, ಸತ್ತಂತಿಹರನು ಬಡಿದೆಚ್ಚರಿಸು, ಕಚ್ಚಾಡುವರನು ಕೂಡಿಸಿ ಒಲಿಸು, ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸು��ಿಸು, ಒಟ್ಟಿಗೆ ಬಾಳುವ ತೆರದಲಿ ಹರಸು. ಛಿದ್ರ ಮಾಡುವವರು ಈಗಲೂ ನಮ್ಮ ಸುತ್ತ ಇದ್ದಾರೆ. ಅವರಿಗೆ ಕುವೆಂಪು ಅವರ ಈ ಹಾಡನ್ನು ಕೇಳಿಸಬೇಕು ಎಂದರು.
9
+ ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕರ್ನಾಟಕ ನೆಲ, ಜಲ, ಭಾಷೆಯಿಂದ ಸಂವೃದ್ಧಗೊಂಡಿದೆ. ವ್ಯಾಪಕ ಉದ್ಯೋಗ ಅವಕಾಶಗಳಿವೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಉಳಿದ ಅಗತ್ಯ ಇರುವ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಲಾಗುವುದು. 8311 ಹೊಸ ಕೊಠಡಿಗಳನ್ನು ಬಜೆಟ್‍ನಲ್ಲಿ ಘೋಷಿಸಲಾಗಿದೆ. 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 2024-25ನೇ ಸಾಲಿನಲ್ಲಿ 600 ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದರು.
10
+ ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೇಸ್ತಾನ್ ಧ್ವಜ ಪ್ರದರ್ಶಿಸಿದ ನಾಲ್ವರು ಅರೆಸ್ಟ್
11
+ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಭಾರಿ ಪರೀಕ್ಷೆ ನಡೆಸಿ, ಸಾಧನೆ ಉತ್ತಮ ಪಡಿಸಲಾಗಿದೆ. ಅಪೌಷ್ಠಿಕತೆ ನಿವಾರಣೆಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಆಹಾರವಾಗಿ ಮೊಟ್ಟೆ, ಚಿಕ್ಕಿ, ಬಾಳೆ ಹಣ್ಣು ವಿತರಿಸಲಾಗುತ್ತಿದೆ. ಈ ವರ್ಷದಿಂದ 9 ಮತ್ತು 10ನೇ ತರಗತಿಯ ಮಕ್ಕಳಿಗೂ ಪೂರಕ ಆಹಾರ ನೀಡಲಾಗುತ್ತಿದೆ. ಸ್ವಯಂ ಸೇವಾ ಸಂಘಗಳ ಸಹಯೋಗದಲ್ಲಿ ಹಾಲಿನೊಂದಿಗೆ ಹೆಚ್ಚಿನ ಪೋಷಕಾಂಶಗಳನ್ನು ನೀಡಲು ಈ ತಿಂಗಳಿನಿಂದಲೇ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದರು.
12
+ ಅರಣ್ಯ ಇಲಾಖೆ ಸಹಯೋಗದಲ್ಲಿ ಸಸ್ಯಶಾಮಲ ಯೋಜನೆಯಡಿ 50 ಲಕ್ಷ ಸಸಿ ನಡೆಸಲಾಗುತ್ತಿದೆ. ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಸಲಾಗುತ್ತಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಬ್ಯಾಗ್ ಹೊರೆಯನ್ನು ಶೇ.50ರಷ್ಟು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ.
13
+ ಮಲೆನಾಡಿನ ಗಾಂಧಿ ಎಂದು ಹೆಸರಾಗಿರುವ ಹೆಚ್.ಜಿ.ಗೋವಿಂದೇಗೌಡರ ಹೆಸರಿನಲ್ಲಿ ಉತ್ತಮ ಸರ್ಕಾರಿ ಶಾಲೆಗಳಿಗೆ ನೀಡಲಾಗುವ ಪ್ರಶಸ್ತಿಗಳು ಮೂರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದವು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಅವನ್ನು ಪುನರಾರಂಭಿಸಲಾಗಿದ್ದು, ನಗದು ಪುರಸ್ಕಾರವನ್ನು ಹೆಚ್ಚಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸಿಎಸ್‍ಆರ್ ನಿ ಬಳಕೆ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
14
+ ಶಾಸಕ ರಿಜ್ಞಾನ್ ಅರ್ಷದ್ ಮಾತನಾಡಿ, ಕನ್ನಡ ನಾಡಿಗೆ ಅಕೃತವಾದ ಧ್ವಜ ಬೇಕಿದೆ. ಆರು ವರ್ಷದ ಹಿಂದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಡಿರುವ ಶಿಫಾರಸ್ಸನ್ನು ಆಧರಿಸಿ ನಾಡಿನ ಧ್ವಜಕ್ಕೆ ಮಾನ್ಯತೆ ದೊರೆಯಬೇಕು ಎಂದರು.
eesanje/url_46_321_9.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ
2
+ ಹಾಸನ, ನ.1- ನಾಳೆಯಿಂದ ನ.15ರವರೆಗೆ ನಡೆಯುವ ಹಾಸನಾಂಬ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇವಸ್ಥಾನದ ಸುತ್ತಮುತ್ತ ಬ್ಯಾರಿಕೇಡ್ ನಿರ್ಮಾಣ ವಿದ್ಯುತ್ ಅಲಂಕಾರ , ಹೂವಿನ ಅಲಂಕಾರ ಸೇರಿದಂತೆ ಭಕ್ತರಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ತಯಾರಿಗಳು ಮುಕ್ತಾಯದ ಹಂತದಲ್ಲಿ ಇದೆ.
3
+ ದೇವಸ್ಥಾನದ ಸುತ್ತಮುತ್ತ ಸೇರಿದಂತೆ ನಗರಸಭೆ ಎದುರು ರಸ್ತೆಯಿಂದ ದೇವಾಲಯದವರೆಗೆ ಜರ್ಮನ್ ಟೆಂಟ್ ಅಳವಡಿಸಲಾಗಿದ್ದು ಹಾಗೂ ನೆಲಹಾಸು (ಮ್ಯಾಟ)ನ್ನು ಹಾಕಲಾಗಿದ್ದು ಅಲ್ಲಲ್ಲಿ ಫ್ಯಾನ್ ವ್ಯವಸ್ಥೆಯನ್ನು ಸಹ ಈ ಬಾರಿ ವಿಶೇಷವಾಗಿ ಮಾಡಲಾಗಿದೆ.
4
+ ಬ್ರಾಹ್ಮಣರ ಬೀದಿ ಸೇರಿದಂತೆ ಸಂತೆಪೇಟೆಯಿಂದ ಬರುವ ರಸ್ತೆ ಪಕ್ಕದಲ್ಲಿಯೂ ಬ್ಯಾರಿಕೆಡ್ ನಿರ್ಮಾಣ ಮಾಡಲಾಗಿದ್ದು ಇಲ್ಲಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಪ್ರವೇಶ ಕಲ್ಪಿಸಲಾಗುತ್ತಿದೆ. ದೇವಾಲಯದ ಗೋಪುರದ ಬಲ ಭಾಗದಲ್ಲಿ ಒಂದು ಸಾವಿರದ ಟಿಕೆಟ್ ಹಾಗೂ ವಿವಿಐಪಿ ಪಾಸ್ ಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದ್ದು ಇಲ್ಲಿಯೇ ಟಿಕೆಟ್ ಕೌಂಟರ್ ಗಳನ್ನುತೆರೆಯಲಾಗಿದೆ.
5
+ ದೇವಾಲಯದ ಬಲಭಾಗದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಬ್ಯಾರಿಕೆಡ್ ನಿರ್ಮಾಣ ಮಾಡಲಾಗಿದ್ದು ಜರ್ಮನ್ ಟೆಂಟ್ ಅನ್ನು ಸಹ ಹಾಕಲಾಗಿದೆ. ವೃದ್ಧರಿಗೆ ಪ್ರತ್ಯೇಕ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವುದು ಈ ಬಾರಿಯ ವಿಶೇಷವಾಗಿದೆ.
6
+ ನಗರಸಭೆ ಎದುರಿನ ಪ್ರವೇಶ ದ್ವಾರದಿಂದ ಅಂಗವಿಕಲರಿಗೆ ದರ್ಶನಕ್ಕೆ ಆಗಮಿಸಲು ವೀಲ್ಚೇರಿಗಳ ವ್ಯವಸ್ಥೆಯನ್ನು ಮಾಡಲಾಗಿದ್ದು ಪ್ರಮುಖ ಪ್ರವೇಶ ದ್ವಾರ ಹಾಗೂ ಇತರೆಡೇ ಪೊಲೀಸ್ ಹಾಗೂ ಹೋಂ ಗಾಡ್ರ್ಸ್‍ಗಳನ್ನು ನಿಯೋಜನೆ ಮಾಡಿ ಸುಲಲಿತ ಹಾಗೂ ತಡೆರಹಿತ ಭಕ್ತರ ಸಾಲು ಸಾಗಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
7
+ ಸಿಸಿ ಕ್ಯಾಮರಾ ಕಣ್ಗಾವಲು:ಆಯಕಟ್ಟು ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೂ ಬಸ್ತ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಹಾಸನಾಂಬ ದೇವಾಲಯ ಗರ್ಭಗುಡಿಯ ಎಡಭಾಗದಲ್ಲಿ ಈ ಬಾರಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಇಲ್ಲಿ ದೇವಾಲಯದ ಸುತ್ತಮುತ್ತ ಹಾಗೂ ಆಯಕಟ್ಟು ಪ್ರದೇಶದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ದಾಖಲಾಗುವ ಸಾರ್ವಜನಿಕರ ಚಲನ ವಲನ ನಿಗ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
8
+ ಶಕ್ತಿ ಯೋಜನೆ : ಲಕ್ಷ ಲಕ್ಷ ಮಹಿಳಾ ಭಕ್ತರ ನಿರೀಕ್ಷೆ: ಶಕ್ತಿ ಯೋಜನೆ ಜಾರಿಯಲ್ಲಿ ಇರುವುದರಿಂದ ರಾಜ್ಯದ ನಾನಾ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಮಹಿಳಾ ಭಕ್ತರು ಈ ಬಾರಿ ಹಾಸನಾಂಬ ದರ್ಶನೋತ್ಸವಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಿದ್ದು ಮಹಿಳೆಯರಿಗೆ ಶೌಚಾಲಯ, ಕುಡಿಯುವ ನೀರು, ಮಜ್ಜಿಗೆ ಸೇರಿದಂತೆ ಮಹಿಳಾ ಪೊಲೀಸ್ ��ಿಯೋಜನೆ ಹೆಚ್ಚಿಸಿದೆ. ದೇವಾಲಯಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಈ ಬಾರಿ ದೊನ್ನೆ ಪ್ರಸಾದ ವಿತರಣೆಯನ್ನು ದೇವಿ ದರ್ಶನದ ಬಳಿಕ ನೀಡಲಾಗುವುದು ಎಂದು ದೇವಸ್ಥಾನ ಆಡಳಿತ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಮಾರುತಿ ಮಾಹಿತಿ ನೀಡಿದ್ದಾರೆ.
9
+ ಅಧಿಕಾರಿಗಳಿಂದ ಪರಿಶೀಲನೆ:ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜಿತಾ, ದೇವಸ್ಥಾನ ಆಡಳಿತ ಅಧಿಕಾರಿ ಮಾರುತಿ ಸೇರಿದಂತೆ ಇತರೆ ಕಂದಾಯ ಅಧಿಕಾರಿಗಳು ದೇವಾಲಯದ ಸುತ್ತಮುತ್ತ ಕೈಗೊಂಡಿರುವ ಪ್ರಗತಿ ಪರಿಶೀಲನೆಯನ್ನು ನಡೆಸಿದ್ದು ದರ್ಶನೋತ್ಸವ ಯಶಸ್ವಿಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
10
+ ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೇಸ್ತಾನ್ ಧ್ವಜ ಪ್ರದರ್ಶಿಸಿದ ನಾಲ್ವರು ಅರೆಸ್ಟ್
11
+ ದಸರಾ ಮಾದರಿ ದೀಪಲಂಕಾರ:ಈಗಾಗಲೇ ನಗರದ ಪ್ರಮುಖ ರಸ್ತೆಗಳಲ್ಲಿ ದಸರಾ ಮಾದರಿ ದೀಪಲಂಕಾರ ಮಾಡಲಾಗಿದ್ದು ಡೈರಿ ವೃತ್ತ, ಸಂತೆಪೇಟೆ ಸರ್ಕಲ್, ಸುಭಾಷ್ ವೃತ್ತ, ಎನ್‍ಆರ್ ಸರ್ಕಲ್, ಹೇಮಾವತಿ ಪ್ರತಿಮೆ ಎದುರು, ಮಹಾವೀರ ಸರ್ಕಲ್, ಸಹ್ಯಾದ್ರಿ ವೃತ್ತ, ಸಾಲಗಾಮೆ ರಸ್ತೆ, ರೈಲು ನಿಲ್ದಾಣದ ಎದುರು ಸರ್ಕಲ್ ಸೇರಿದಂತೆ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ದೀಪಲಂಕಾರ ಹಾಗೂ ಆರ್ಚ್ ಗಳ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.ರಾತ್ರಿ ವೇಳೆ ರಸ್ತೆ ಹಾಗೂ ಸರ್ಕಾರಿ- ಖಾಸಗಿ ಕಟ್ಟಡಗಳು ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿದ್ದು ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
12
+ ದರ್ಶನೋತ್ಸವ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಜೊತೆಗೆ ಮಹಿಳೆಯರಿಗೆ ಹೆಚ್ಚಿನ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಮಹಿಳಾ ಪೊಲೀಸರನ್ನು ನಿಯೋಜನೆ ಮಾಡುವ ಸಂಬಂಧ ಜಿಲ್ಲಾ ಪೊಲೀಸ್ ವರಿಧಿಷ್ಠಾಕಾರಿ ಮೊಹಮ್ಮದ್ ಸುಜಿತಾ ಅವರು ಮಾಹಿತಿ ನೀಡಿದ್ದು 1200 ಪೊಲೀಸ್ ಸಿಬ್ಬಂದಿಯೊಂದಿಗೆ ಹೋಂ ಗಾಡ್ರ್ಸ್ ಗಳನ್ನು ಸಹ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
13
+ ಅಲ್ಲದೆ ಇತ್ತೀಚಿಗೆ ದೇವಾಲಯಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಹಾಗೂ ಬಂದೂಬಸ್ತ್ ಕುರಿತು ಮಾಹಿತಿ ಐಜಿಪಿ ಬೋರಲಿಂಗಯ್ಯ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
14
+ ತುಲಾಭಾರ ವ್ಯವಸ್ಥೆ :ಇದೇ ಪ್ರಥಮ ಬಾರಿಗೆ ಭಕ್ತಾದಿಗಳಿಗೆ ತುಲಾಭಾರ ವ್ಯವಸ್ಥೆಯನ್ನು ಮಾಡಲಾಗಿದ್ದು ಹಣ್ಣು , ತರಕಾರಿ , ಧನ ಧಾನ್ಯ ಸೇರಿದಂತೆ ಇತರೆ ವಸ್ತುಗಳ ಮೂಲಕ ತುಲಾಭಾರವನ್ನು ಮಾಡುವ ಸಂಬಂಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ತುಲಾಭಾರ ದಲ್ಲಿಯೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ.
15
+ ಟ್ರಂಪ್ ಅಧ್ಯಕ್ಷ ಚುನಾವಣೆಗೆ ಭಾರಿ ಬೆಂಬಲ
16
+ ಇ-ಹುಂಡಿ ವ್ಯವಸ್ಥೆ :ದೇವಾಲಯ ಗರ್ಭಗುಡಿ ಹಾಗೂ ಸುತ್ತಮುತ್ತ ಈಗಾಗಲೇ ದೇವಾಲಯ ಆಡಳಿತ ಮಂಡಳಿಯಿಂದ ಹಣ ಆಭರಣ ಕಾಣಿಕೆ ಹುಂಡಿಯನ್ನು ಇಡಲಾಗಿದ್ದು ಇದರೊಂದಿಗೆ ಇದೇ ಪ್ರಥಮ ಬಾರಿ ಇ- ಪೇಮೆಂಟ್ ಕ್ಯೂಆರ್ ಕೋಡ್ ಬ್ಯಾನರ್ ವ್ಯವಸ್ಥೆಯನ್ನು ಮಾಡಲಾಗಿದೆ.
eesanje/url_46_322_1.txt ADDED
@@ -0,0 +1,7 @@
 
 
 
 
 
 
 
 
1
+ ಕಾವೇರಿ ವೆಬ್‍ಸೈಟ್‍ನಿಂದ ದಾಖಲೆ ಕದ್ದು ಬ್ಯಾಂಕ್ ಖಾತೆಗಳಿಂದ ಹಣ ಲೂಟಿ
2
+ ಬೆಂಗಳೂರು,ಅ.31-ಕರ್ನಾಟಕ ಸರ್ಕಾರದ ನೊಂದಣಿ ಮತ್ತು ಮುಂದ್ರಾಂಕ ಇಲಾಖೆಯ ಅಧಿಕೃತ ಕಾವೇರಿ ವೆಬ್‍ಸೈಟ್ ಮುಖಾಂತರ ದಾಖಲೆ ಕದ್ದು ಎ.ಇ.ಪಿ.ಎಸ್ ಸಾಧನವನ್ನು ಬಳಸಿ ಸಾರ್ವಜನಿಕರ ಗಮನಕ್ಕೆ ಬಾರದಂತೆ ಅವರ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುತ್ತಿದ್ದ ಇಬ್ಬರನ್ನು ಯಲಹಂಕ ಸೆನ್ ಠಾಣೆ ಪೊಲೀಸರು ಬಂಧಿಸಿ 1.5ಲಕ್ಷ ನಗದು, ಕೃತ್ಯಕ್ಕೆ ಬಳಸಿದ್ದ ಎರಡು ಲ್ಯಾಪ್‍ಟ್ಯಾಪ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
3
+ ಬಿಹಾರ ಮೂಲದ ದೀಪಕ್ ಕುಮಾರ್ (33) ಮತ್ತು ನಿವೇದಿತ್ ಕುಮಾರ್ (26) ಬಂಧಿತ ಆರೋಪಿಗಳುಪಿರ್ಯಾದುದಾರರ ಬ್ಯಾಂಕ್ ಖಾತೆಗಳಿಂದ ಅವರ ಗಮನಕ್ಕೆ ಬಾರದೇ, ಹಂತ ಹಂತವಾಗಿ ಒಟ್ಟು 38ಸಾವಿರ ಮತ್ತು 10 ಸಾವಿರ ಕಡಿತವಾಗಿದ್ದರ ಬಗ್ಗೆ ಅವರಿಗೆ ಯಾವುದೇ ಬ್ಯಾಂಕ್ ಮಾಹಿತಿಯಾಗಲಿ, ಓಟಿಪಿಯಾಗಲಿ, ಯಾರೊಂದಿಗೂ ಶೇರ್ ಮಾಡಿಕೊಂಡಿರುವುದಿಲ್ಲ.
4
+ ಯಾವುದೇ ಅಪರಿಚಿತ ಲಿಂಕ್ ಕ್ಲಿಕ್ ಮಾಡದೇ ಇದ್ದರೂ ಕೂಡ ಖಾತೆಗಳಿಂದ ಹಣ ವರ್ಗಾವಣೆಯಾಗಿರುವುದರ ಬಗ್ಗೆ ಯಲಹಂಕ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಎರಡು ವಂಚನೆ ಪ್ರಕರಣಗಳು ದಾಖಲಾಗಿತ್ತು.
5
+ ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವುಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಸರ್ಕಾರಿ ವೆಬ್ ಸೈಟ್‍ಗಳಿಂದ ಸಾರ್ವಜನಿಕರ ನೊಂದಣಿ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು ಆಧಾರ್ ಕಾರ್ಡ್ ಮಾಹಿತಿ ಮತ್ತು ಬೆರಳಚ್ಚು ಗಳನ್ನು ನಕಲು ಮಾಡಿಕೊಂಡು ಪಿರ್ಯಾದುದಾರರ ಗಮನಕ್ಕೆ ಬಾರದಂತೆ ಆಧಾರ್ ಕಾರ್ಡ್‍ಗೆ ಲಿಂಕ್ ಆದಂತಹ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಮಾಡಿಕೊಂಡು ವಂಚಿಸುತ್ತಿದ್ದ ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಸಿದ್ದಾರೆ.
6
+ ಆರೋಪಿಗಳನ್ನು ವಿಚಾರಣೆಗೊಳಪಡಿಸಿ 1.5 ಲಕ್ಷ ರೂ. ನಗದು ಕೃತ್ಯಕ್ಕೆ ಬಳಸಿದ್ದ ಎರಡು ಲ್ಯಾಪ್ ಟಾಪ್, ಎರಡು ಮೊಬೈಲ್ ಫೆÇೀನ್ ಮತ್ತು ಮೂರು ಬೆರಳಚ್ಚು ಸಾಧನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
7
+ ಮತ್ತೊಬ್ಬ ಅರೋಪಿಯು ತಲೆ ಮರೆಸಿಕೊಂಡಿದ್ದು ಈತನ ಶೋಧ ಕಾರ್ಯ ಮುಂದುವರಿದಿದೆ.ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಈಶಾನ್ಯ ವಿಭಾಗದ ಯಲಹಂಕ ಸೆನ್ ಪೊಲೀಸ್ ಠಾಣೆ ಇನ್ಸಪೆಕ್ಟರ್ ಮಲ್ಲಿಕಾರ್ಜುನ ಹಾಗೂ ಪಿ.ಎಸ್.ಐ ರಮಣ್‍ಗೌಡ ಅವರ ತಂಡ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.
eesanje/url_46_322_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕನ್ನಡಿಗರ ನೆಲದ ಪ್ರೀತಿಗೆ ಹೃದಯ ತುಂಬಿ ಬಂದಿದೆ : ಎಚ್‍ಡಿಕೆ
2
+ ದುಬೈ,ಅ.30- ಉತ್ತಮ ಬದುಕು ರೂಪಿಸಿಕೊಳ್ಳಲು ಹೊರನಾಡಿಗೆ ಬಂದಿರುವ ಕನ್ನಡಿಗರು ನಮ್ಮ ಸಂಸ್ಕøತಿ, ಭಾಷೆ, ನೆಲ ಜಲದ ಮೇಲೆ ಇರಿಸಿರುವ ಪ್ರೀತಿ, ಬದ್ಧತೆ ಕಂಡು ನನ್ನ ಹೃದಯ ಉಕ್ಕಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
3
+ ಯುಎಇ ಒಕ್ಕಲಿಗರ ಸಂಘ ಇಂದು ದುಬೈನಲ್ಲಿನ ಶೇಕ್ ರಶೀದ್ ಆಡಿಟೋರಿಯಂನಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೊರನಾಡಿನಲ್ಲಿ ನೆಲೆಸಿದ್ದರೂ ತಾಯ್ನಾಡಿನ ಪ್ರೇಮ ಉಳಿಸಿಕೊಂಡು, ಕನ್ನಡ ಸೊಗಡನ್ನು ಬದುಕಿನಲ್ಲಿ ಹಾಸುಹೊಕ್ಕಾಗಿಸಿಕೊಂಡು ಬಾಳ್ವೆ ನಡೆಸುತ್ತಿರುವ ಕನ್ನಡಿಗರಿಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸಿದರೂ ಸಾಲದು. ಕೆಂಪೇಗೌಡರ ಉತ್ಸವದಲ್ಲಿ ಕನ್ನಡ ಸಂಸ್ಕøತಿಯ ಸೊಗಡು ಸಾಕ್ಷಾತ್ಕಾರವಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
4
+ ನಾಡಪ್ರಭು ಕೆಂಪೇಗೌಡ ಅವರ ಆಡಳಿತ, ದೂರದೃಷ್ಟಿ ಎಲ್ಲೇ, ಸೀಮೆಗಳು ಇಲ್ಲ. ಅವರ ಆದರ್ಶ ಆಡಳಿತ ಎಲ್ಲರೂ ಅನುಕರಣೆ ಮಾಡಬೇಕು. ಸರ್ವರನ್ನು ಸಮನಾಗಿ ಕಂಡು ಆಳ್ವಿಕೆ ನಡೆಸಿದವರು. ಅಂತಹವರನ್ನು ಇಂದು ದುಬೈನಲ್ಲಿ ಸ್ಮರಿಸಿಕೊಳ್ಳುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.
5
+ ಅದಾವ ಶುಭ ಮುಹೂರ್ತದಲ್ಲಿ ನಾಡಪ್ರಭುಗಳು ಬೆಂಗಳೂರು ಮಹಾನಗರಕ್ಕೆ ಅಡಿಪಾಯ ಹಾಕಿದರೋ ಇಂದು ಜಾಗತಿಕ ನಗರವಾಗಿ ಬೆಳೆದಿದ್ದು, ಕರ್ನಾಟಕ ಹಾಗೂ ಭಾರತದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡುತ್ತಿದೆ. ಜಾಗತಿಕ ಪೈಪೋಟಿ ನೀಡುತ್ತಾ ಜಗತ್ತಿನ ಅತ್ಯುತ್ತಮ ನಗರಗಳಲ್ಲಿ ಒಂದಾಗಿ ಬೆಳೆದಿದೆ ಎಂದು ಅವರು ನುಡಿದರು.
6
+ ವಾರಕ್ಕೆ 70 ಗಂಟೆಗೂ ಹೆಚ್ಚು ದುಡಿಯುತ್ತಿದ್ದಾರೆ ಭಾರತೀಯ ನಾರಿಯರು
7
+ ಕೆಂಪೇಗೌಡರ ಅದರ್ಶದೊಂದಿಗೆ ಶ್ರಮಿಸಿದ ನಮ್ಮ ಪೂರ್ವಿಕ ರೈತ ಬಂಧುಗಳು ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ. ಅದರ ಪರಿಣಾಮವಾಗಿಯೇ ಬೆಂಗಳೂರಿನಲ್ಲಿ ಇವತ್ತಿನ ದಿನ ಆಗುತ್ತಿರುವ ಆರ್ಥಿಕ ಉತ್ಪಾದನೆ ನಾಡಿಗೆ, ದೇಶಕ್ಕೆ ಬೆನ್ನುಲುಬಾಗಿ ನಿಂತಿದೆ. ಇವತ್ತು ದೇಶದ ಜಿಡಿಪಿ ಸದಾ ಏರುಮುಖವಾಗಿ ಚಲಿಸುತ್ತಿದೆ ಎಂದರೆ ಕೆಂಪೇಗೌಡರು ಕಟ್ಟಿದ್ದ ಬೆಂಗಳೂರು ನಗರದ ಕಾಣಿಕೆ ಹಿರಿದು ಎಂದರು.
8
+ ಕೆಂಪೇಗೌಡರು ಕಟ್ಟಿದ ಕೆರೆಗಳು ಏನಾದವು: ಇವತ್ತು ನಾವು ಕೆಂಪೇಗೌಡರನ್ನು ಸ್ಮರಣೆ ಮಾಡುತ್ತಿದ್ದೇವೆ. ಆದರೆ, ಅವರು ಬೆಂಗಳೂರಿನಲ್ಲಿ ನಿರ್ಮಿಸಿದ ಕೆರೆಗಳು ಏನಾದವು? ನಮ್ಮ ಸ್ವಾರ್ಥ, ಸಂಕುಚಿತ ಮನಸ್ಥಿತಿಯ ಕಾರಣಕ್ಕೆ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಅನೇಕ ಕೆರೆಗಳನ್ನು ನಾಶ ಮಾಡಲಾಗಿದೆ. ಒಂದು ಕಾಲದಲ್ಲಿ ಬೆಂಗಳೂರನ್ನು ಗಾರ್ಡನ್ ಸಿಟಿ ಎಂದು ನಾವೆಲ್ಲರೂ ಹೆಮ್ಮೆಯಿಂದ ಕರೆಯುತ್ತಿದ್ದೆವು. ಈಗ ಗಾರ್ಬೇಜ್ ಸಿಟಿ ಎಂದು ಕರ���ಯಲಾಗುತ್ತಿದೆ. ಇದಕ್ಕೆ ಹೊಣೆ ಯಾರು ಎಂದು ಅವರು ಕಳವಳ ವ್ಯಕ್ತಪಡಿಸಿದರು.
9
+ ಇಂದು ತಾಂತ್ರಿಕವಾಗಿ ನಾವು ಬಹಳಷ್ಟು ಸಾಸಿದ್ದೇವೆ. ಚಂದ್ರಯಾನ, ಸೂರ್ಯಯಾನ ಎಂದು ಸಾಧನೆ ಮಾಡುತ್ತಿದ್ದೇವೆ. ಆದರೆ, ಬೆಂಗಳೂರಿನಂಥ ಐತಿಹಾಸಿಕ ನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಸೋತಿದ್ದೇವೆ, ಇದು ವಿಷಾದನೀಯ. ರಾಜಕಾರಣಿಗಳಾಗಿ ನಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ನಾವೆಲ್ಲೇ ಸೋತಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
10
+ ನಾಡಪ್ರಭು ಕೆಂಪೇಗೌಡರ ಉತ್ಸವದಲ್ಲಿ ಶ್ರೀ ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ದುಬೈ ಕನ್ನಡಿಗರು, ಅದರಲ್ಲಿಯೂ ಮಕ್ಕಳು ಪ್ರದರ್ಶಿಸಿದ ಸಾಂಸ್ಕøತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.
11
+ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್, ಕೆ.ಆರ್.ಪೇಟೆ ಮಂಜುನಾಥ್, ಯುಎಇ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ನಂದಕಿಶೋರ್, ಉಪಾಧ್ಯಕ್ಷ ಹರೀಶ್ ಕೋಡಿ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು, ಕನ್ನಡ ಬಂಧುಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
eesanje/url_46_322_11.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ
2
+ ಬೆಂಗಳೂರು, ಅ.30-ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಮಿಂಚಿನ ದಾಳಿ ನಡೆಸಿ ಸರ್ಕಾರಿ ಭ್ರಷ್ಠ ಅಧಿಕಾರಿಗಳ ಬಂಡವಾಳ ಬಯಲಿಗೆಳೆದಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆಗಳು , ಕಚೇರಿ, ತೋಟದ ಮನೆ ಹಾಗೂ ವಿವಿದೆಡೆ ಇಂದು ಏಕಾಕಾಲಕ್ಕೆ ರಾಜ್ಯಾದ್ಯಂತ ಚಿತ್ರದುರ್ಗ, ತುಮಕೂರು,ಹಾಸನ, ಕಲಬುರಗಿ, ದಾವಣಗೆರೆ ,ಬೆಂಗಳೂರು ,ಬೆಳಗಾವಿ ,ಬೀದರ್, ಕಲಬುರಗಿ ಸೇರಿದಂತೆ ಸುಮಾರು 15 ಜಿಲ್ಲೆಗಳಲ್ಲಿ 95ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
3
+ ಹಾಸನ: ಹಾಸನದಲ್ಲಿ ಕೆಪಿಟಿಸಿಎಲ್ ಕಿರಿಯ ಇಂಜಿನಿಯರ್ ನಾರಾಯಣ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿದ್ದೆಯಿಂದ ಏಳುವ ಮುಂಚೆಯೇ ಲೋಕಾಯುಕ್ತ ಎಸ್‍ಪಿ ಮಲ್ಲಿಕ್ ನೇತೃತ್ವದ ಅಕಾರಿಗಳ ತಂಡ ಮನೆಯ ಬಾಗಿಲು ತಟ್ಟಿದೆ. ಡಿವೈಎಸ್‍ಪಿ ತಿರುಮಲೇಶ್, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ಅವರ ನಿವಾಸದಲ್ಲಿ ಚಿನ್ನಾಭರಣ, ಆಸ್ತಿ ದಾಖಲೆ ಹಾಗೂ ಗೊರೂರಿನಲ್ಲಿರುವ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
4
+ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್‍ನಲ್ಲಿ ಪರಿಶೀಲನೆ ನಡೆಸಿದ್ದಾರೆ.
5
+ ಇನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆ ಹಾಗು ಕಛೇರಿ, ಸಂಬಂಧಿಕರ ಮನೆಯಲ್ಲೂ ಶೋಧಕಾರ್ಯ ನಡೆದಿದೆ. ದಾಳಿ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು ಹಣ ,ಚಿನ್ನಾಭರಣ ಆಸ್ತಿ ಪತ್ರದ ದಾಖಲೆಗಳು ಪತ್ತೆಯಾಗಿದ್ದು, ಅವುಗಳನ್ನು ಪರಿಶೀಲಿಸುತ್ತಿದ್ದಾರೆ.
6
+ ವಾರಕ್ಕೆ 70 ಗಂಟೆಗೂ ಹೆಚ್ಚು ದುಡಿಯುತ್ತಿದ್ದಾರೆ ಭಾರತೀಯ ನಾರಿಯರು
7
+ ಹಾವೇರಿ: ಹಾವೇರಿ ಜಿಲ್ಲೆಯಲ್ಲಿ 9 ಕಡೆ ದಾಳಿ ನಡೆದಿದ್ದು ಹಾವೇರಿ ಪ್ರಾದೇಶಿಕ ಅರಣ್ಯಾಕಾರಿ (ಆರ್‍ಎಫ್‍ಓ) ಅಪರ ಮೇಶಪ್ಪ ಪೇರಲನವರ್ ಹಾಗು ನ್ಯಾಮತಿ ಪ್ರಾದೇಶಿಕ ಅರಣ್ಯಾಧಿಕಾರಿ (ಆರ್‍ಎಫ್‍ಓ) ಮಾಲತೇಶ್‍ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅವರ ಮನೆ ,ಕಚೇರಿ ಮೇಲೆ 20ಕ್ಕೂ ಹೆಚ್ಚು ಸಿಬ್ಭಂದಿ ದಾಳಿ ಮಾಡಿದ್ದಾರೆ.
8
+ ಭಾನುವಾರದ ರಜೆಯ ಮಜಾ ಮಾಡಿ ಮಲಗಿದ್ದವರು ಬೆಳಿಗ್ಗೆ ದಿಢೀರ್ ಎಂಟ್ರೀ ಕೊಟ್ಟ ಲೋಕಾಯುಕ್ತ ಪೊಲೀಸರನ್ನು ಕಂಡು ಅಧಿಕಾರಿ ಮನೆಯವರು ದಂಗಾಗಿದ್ದಾರೆ. ಮನೆಯಲ್ಲಿದ್ದ ನಗದು, ವಿವಿದೆಡೆ ಅಕ್ರಮವಾಗಿ ಸಂಪಾದಿಸಿದ ಆಸ್ತಿ ಪತ್ತೆ ಮಾಡಲಾಗಿದೆ.
9
+ ಬೀದರ್: ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಮತ್ತು ದೇವದುರ್ಗದ ಕೃಷ್ಣ ಜಲಾನಯನ ಇಲಾಖೆಯ ಕಾರ್ಯಪಾಲಕ ಅಭಿಯಂತರ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಕಲಬುರಗಿ ಪಾಲಿಕೆಯ ಟೌನ್ ಪ್ಲ್ಯಾನರ್ ಅಧಿಕಾರಿ ಅಪ್ಪಾಸಾಹೇಬ್ ಕಾಂಬಳೆ ಅವರ ರಾಮತೀರ್ಥ ನಗರದ ನಿವಾಸ, ಆಟೋ ನಗರದಲ್ಲಿ ಹೊಂದಿರುವ ಕಾರ್ಖಾನೆ ಮೇಲೆ ದಾಳಿ ಮಾಡಿರುವ ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
10
+ ಬೆಂಗಳೂರು: ಬೆಂಗಳೂರಿನ ಪಾಲಿಕೆ ಅಧಿಕಾರಿ ವಲಯಕ್ಕೂ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೆಗ್ಗನಹಳ್ಳಿ ವಾರ್ಡ್ ಎಆರ್‍ಓ ಚಂದ್ರಪ್ಪ ಬಿರಜ್ಜನವರ್ ಅವರ ಮನೆ, ಕಚೇರಿ ಸೇರಿ ಮೂರು ಕಡೆ ದಾಳಿ ನಡೆಸಲಾಗಿದೆ. ಈ ಹಿಂದೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದ ಎಆರ್ ಓ ಚಂದ್ರಪ್ಪ ಲೋಕಾಯುಕ್ತ ಟ್ರ್ಯಾಪ್ ಗೆ ಒಳಗಾಗಿದ್ದರು. ಅದರ ಮುಂದುವರಿದ ಭಾಗವಾಗಿ ದಾಳಿ ಮುಂದುವರಿಸಿರೋ ಲೋಕಾಯುಕ್ತ ಪೊಲೀಸರು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
11
+ ದಾವಣಗೆರೆ: ದಾವಣಗೆರೆಯಲ್ಲಿ ಕೈಗಾರಿಕೆ ಮತ್ತು ಸುರಕ್ಷತಾ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಮನೆ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು ಹಾಗೂ ಅವರ ಸ್ವಂತ ಊರಾದ ಕೊಳ್ಳೆಗಾಲ ಸೇರಿದಂತೆ ಒಟ್ಟು ಮೂರು ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿರುವ ಅಧಿಕಾರಿಗಳು. ಬೆಂಗಳೂರಿನ ಉಪಕಾರ್ ಲೇಔಟ್, ಆಂಧ್ರಹಳ್ಳಿ , ಕೊಳ್ಳೆಗಾಲ ಮನೆಯಲ್ಲಿ ಶೋಧ ನಡೆಸಲಾಗಿದೆ.
12
+ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
13
+ ಬ್ಯಾಡರಹಳ್ಳಿ ತಂದೆಯ ಮನೆ, ಬಿಇಎಲ್, ವಿನಾಯಕ ನಗರ ಸೇರಿದಂತೆ ವಿವಿದೆಢೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಮನೆಯಲ್ಲಿ 8 ಲಕ್ಷ ನಗದು ಹಣ, ಹತ್ತು ದುಬಾರಿ ಬೆಲೆಯ ವಾಚ್‍ಗಳು, ಎಂಟು ಕೂಲಿಂಗ್ ಸನ್ ಗ್ಲಾಸ್ ಗಳು, ಚಿನ್ನ ಬೆಳ್ಳಿ ವಸ್ತುಗಳು, ಎರಡು ಕಾರು, ಆಸ್ತಿ ಪತ್ರಗಳು ಪತ್ತೆಯಾಗಿದೆ.
14
+ ಬೆಳಗಾವಿ: ಬೆಳಗಾವಿಯ ಪಂಚಾಯತ್ ರಾಜ್ ಇಲಾಖೆ ಎಇಇ ಎಂ.ಎಸ್.ಬಿರಾದಾರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಡಿಎಸ್ಪಿ ಜೆ.ರಘು ತಂಡದಿಂದ ದಾಳಿ ನಡೆಸಿದ್ದಾರೆ.ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟ್‍ಮೆಂಟ್‍ನಲ್ಲಿರುವ ಅವರ ನಿವಾಸ, ಬೆಳಗಾವಿ ನಿವಾಸ, ಕಿತ್ತೂರು, ಖಾನಾಪುರದಲ್ಲಿ ಇರೋ ನಿವಾಸದ ಮೇಲೂ ಏಕಕಾಲಕ್ಕೆ ದಾಳಿ ನಡೆಸಿರುವ ಪೊಲೀಸರು ಅಕ್ರಮ ಸಂಪತ್ತು ಬಯಲಿಗೆಳೆದಿ���್ದಾರೆ.
15
+ ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನೀಯರ್ ನಾಗೇಂದ್ರಪ್ಪ ಅವರ ಮನೆ, ಕಚೇರಿ ಸೇರಿ ವಿವಿದೆಡೆ ಲೋಕಾಯುಕ್ತ ಡಿಎಸ್ಪಿ ಮಂಜುನಾಥ್. ಡಿಎಸ್ಪಿ.ಹರೀಶ್. ನೇತೃತ್ವದಲ್ಲಿ ದಾಳಿ ನಡೆದಿದೆ.
16
+ ಇನ್ಪೆಕ್ಟರ್ ಶಿವರುದ್ರಪ್ಪ ಮೇಟಿ,ಸತ್ಯನಾರಾಯಣ, ಸಲೀಂ ನೇತೃತ್ವದ ತಂಡ ತುಮಕೂರು ನಗರದ ಬಟವಾಡಿಯಲ್ಲಿರುವ ಮನೆ ಹಾಗೂ ಶಿರಾ ತಾಲ್ಲೂಕಿನ ಮದ್ದೇರಹಳ್ಳಿ, ರಾಗಲಹಳ್ಳಿಯಲ್ಲಿರುವ ನಿವಾಸ , ಫಾರಂ ಹೌಸ್ ಮೇಲೂ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮುಂದುವರೆದಿದೆ.
eesanje/url_46_322_12.txt ADDED
@@ -0,0 +1,7 @@
 
 
 
 
 
 
 
 
1
+ ಮತ್ತೆ ಬಾಲ ಬಿಚ್ಚಿದ ಎಂಇಎಸ್, ಕನ್ನಡಿಗರ ಆಕ್ರೋಶ
2
+ ಬೆಂಗಳೂರು, ಅ.30- ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತೆ ಬಾಲಬಿಚ್ಚಲಾರಂಭಿಸಿದೆ. ಅತ್ತ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಕರಾಳ ದಿನಾಚರಣೆಗೆ ನಮ್ಮ ಪ್ರತಿನಿಧಿ ಬರುತ್ತಾರೆ ಎಂದು ಹೇಳುವ ಮೂಲಕ ಉರಿಯೋ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಹೀಗಾಗಿ ಬೆಳಗಾವಿ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ.
3
+ ನಾಡದ್ರೋಹಿ ಎಂಇಎಸ್ ಪದೇ ಪದೇ ಮುಖಭಂಗ ಅನುಭವಿಸಿದರೂ ಮತ್ತದೆ ತನ್ನ ಹಳೆ ಚಾಳಿಯನ್ನು ಮುಂದುವರೆಸಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನಾಚರಣೆಗೆ ಮುಂದಾಗಿದೆ. ಕರಾಳ ದಿನಾಚಣೆಗೆ ಅನುಮತಿ ಕೇಳಿದ್ದ ನಾಡದ್ರೋಹಿಗಳಿಗೆ ಮುಖಭಂಗವಾಗಿದೆ.
4
+ ಬೆಳಗಾವಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕರಾಳ ದಿನಾಚಣೆಗೆ ಅನುಮತಿ ನಿರಾಕರಿಸಿದ್ದು, ನಾಡದ್ರೋಹಿಗಳ ನಿದ್ದೆಗೆಡಿಸಿದೆ. ಆದರೂ ಶತಾಯ ಗತಾಯ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಮಾಡಲು ನಾಡದ್ರೋಹಿಗಳು ತೆರೆ ಮರೆಯಲ್ಲಿ ಕಸರತ್ತು ನಡೆಸಿದ್ದು, ಈ ಹಿನ್ನೆಲೆ ಸಭೆ ಕರೆದು ಕರಾಳ ದಿನಾಚರಣೆ ಕುರಿತು ಚರ್ಚೆ ನಡೆಸಿದ ಎಂಇಎಸ್ ಮುಖಂಡರು, ಸಭೆಯಲ್ಲಿ ಮಹಾರಾಷ್ಟ್ರದ ನಾಯಕರನ್ನು ಕರೆತರಲು ಮುಂದಾಗಿದ್ದಾರೆ ಎನ್ನಲಾಗಿದೆ.
5
+ ಭೌಗೋಳಿಕ ರಾಜಕೀಯ ಉದ್ವಿಗ್ನತೆಗೆ ಅಮೆರಿಕ ಕಾರಣ ; ರಷ್ಯಾ
6
+ ಇನ್ನು ಕರ್ನಾಟಕ ರಾಜ್ಯೋತ್ಸವ ಹೊಸ್ತಿಲ್ಲಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಗಡಿ ಖ್ಯಾತೆ ತೆಗೆದಿದ್ದಾರೆ. ಗಡಿ ವಿವಾದ ಕೆದಕಿದ ಮಹಾ ಸಿಎಂ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಇದರಿಂದ ಬೆಳಗಾವಿಯ ಎಂಇಎಸ್ ಪುಂಡರಿಗೆ ಆನೆ ಬಲ ಬಂದಂತಾಗಿದೆ.
7
+ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಮಹಾರಾಷ್ಟ್ರ ಸರ್ಕಾರದ ಬೆಂಬಲವಿದೆ. ನ.1ರಂದು ಎಂಇಎಸ್‍ನಿಂದ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಲಾಗ್ತಿದೆ. ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಪ್ರತಿನಿ ಕಳುಹಿಸುವೆ ಎಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಸಿಎಂ ಏಕನಾಥ ಸಿಂಧೆ ಹೇಳಿಕೆ ನೀಡಿದ್ದಾರೆ.
eesanje/url_46_322_2.txt ADDED
@@ -0,0 +1,8 @@
 
 
 
 
 
 
 
 
 
1
+ ಮಲೆನಾಡನ್ನು ವಿಶೇಷ ಕೃಷಿ ವಲಯವೆಂದು ಘೋಷಿಸಲು ಹಕ್ಕೊತ್ತಾಯ
2
+ ಬೆಂಗಳೂರು, ಅ.31- ಮಲೆನಾಡನ್ನು ವಿಶೇಷ ಕೃಷಿ ವಲಯವೆಂದು ಘೋಷಿಸಬೇಕು. ಅರಣ್ಯ ಕಾಯ್ದೆ ಬಗ್ಗೆ ಪುನರ್ ಮನನವಾಗಬೇಕು. ನೆಲವಾಸಿಗಳನ್ನು ಎತ್ತಂಗಡಿ ಮಾಡಬಾರದು. ಮಲೆನಾಡು-ಕರಾವಳಿ ಭಾಗಕ್ಕೆ ಹೈಕೋರ್ಟ್ ಪೀಠ ಮಂಜೂರು ಮಾಡಬೇಕು ಎಂಬ ಹಕ್ಕೊತ್ತಾಯವನ್ನು ಇಂದು ನಡೆದ ಮಲೆನಾಡು-ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಮಾಡಲಾಯಿತು.
3
+ ವಿಜಯನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಪರಿಹಾರದ ಮಾರ್ಗೋಪಾಯಗಳ ಬಗ್ಗೆಯೂ ಪ್ರಸ್ತಾಪಿಸಲಾಯಿತು.
4
+ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ರೋಗಗಳು ಕಾಣಿಸಿಕೊಂಡಿದ್ದು, ಪರಿಹಾರ ದೊರೆಯಬೇಕು. ಅರಣ್ಯ ಹಕ್ಕು ಕಾಯ್ದೆಗೆ ಸೂಕ್ತ ತಿದ್ದುಪಡಿ ತಂದು ಜನಪರವಾಗಿ ಕಾಯ್ದೆಗಳನ್ನು ಸರಳೀಕರಣಗೊಳಿಸಬೇಕು. ಮಡಿಕೇರಿ, ಚಿಕ್ಕಮಗಳೂರು, ಹಾಸನ ಪ್ರದೇಶದ ಕಾಫಿ, ಟೀ ಕಂಪೆನಿಯಲ್ಲಿನ ಕಾರ್ಮಿಕರ ಬವಣೆಗೆ ಸೂಕ್ತ ಪರಿಹಾರ ಸಿಗಬೇಕು. ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳು ದೊರೆಯಲು ತಾಲ್ಲೂಕಿಗೊಂದು ಕೈಗಾರಿಕಾ ಪ್ರದೇಶ ನಿರ್ಮಾಣವಾಗಬೇಕು. ಕುಂದಾಪುರ ಕನ್ನಡ ಮತ್ತು ಹವ್ಯಕ ಕನ್ನಡ ಭಾಷೆಗಳಿಗೆ ಪ್ರತ್ಯೇಕ ಅಕಾಡೆಮಿ ರಚನೆಯಾಗಬೇಕು ಎಂಬ ಒತ್ತಾಯ ಮಾಡಲಾಯಿತು.
5
+ ಕಂದಾಯ, ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಎದುರಾಗಿರುವ ತೊಡಕುಗಳನ್ನು ನಿವಾರಿಸಬೇಕು. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮೆಡಿಕಲ್, ಐಐಟಿ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆ ರೂಪಿಸಬೇಕು. ಬಗರ್‍ಹುಕುಂ ಹಾಗೂ ಜೀವನಾಧಾರಿತ ಒತ್ತುವರಿ ಕೃಷಿ ಜಮೀನಿನಲ್ಲಿ ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಮೀನುಗಾರಿಕೆಗೆ ಆಧುನಿಕ ಸ್ಪರ್ಶ ನೀಡಬೇಕು. ಕುದುರೆ ಮುಖ ನಿರಾಶ್ರಿತರಿಗೆ ಸೂರು ಕಲ್ಪಿಸಬೇಕು. ಮೀನುಗಾರಿಕೆಗೆ ಆಧುನಿಕ ಸ್ಪರ್ಶ ನೀಡಬೇಕು. ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಬೇಕು. ಗೋರಖ್‍ಸಿಂಗ್ ವರದಿ ಜಾರಿ ಮಾಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಸಭೆಯಲ್ಲಿ ಮಾಡಲಾಯಿತು.
6
+ ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು
7
+ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಎದುರಿಸುತ್ತಿರುವ ಹತ್ತು-ಹಲವು ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ, ದೇವರಾಜು, ಲೋಹಿತ್ ನಾಯ್ಕರ್, ಜ್ಯೋತಿ ಪಾಟೀಲ್, ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಸಂಚಾಲಕ ಸುನಿಲ್‍ಕುಮಾರ್ ಮುರೊಳ್ಳಿ ಮತ್ತಿತರರು ಮಾತನಾಡಿ, ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು.
8
+ ವಿಧಾನ ಪರಿ���ತ್ ಮಾಜಿ ಸಭಾಪತಿ ಬಿ.ಎಲ್.ಶಂಕರ್, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ವಿನಯ್‍ಕುಮಾರ್ ಸೊರಕೆ, ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಸುಕುಮಾರ್ ಶೆಟ್ಟಿ, ರೈತ ಮುಖಂಡ ಕೆ.ಟಿ.ಗಂಗಾಧರ್, ನಾರಾಯಣಗುರು ಹೋರಾಟ ಸಮಿತಿಯ ಸತ್ಯಜಿತ್ ಸೂರತ್‍ಕಲ್, ಹೋರಾಟಗಾರಾದ ರಾಧಾ ಸುಂದರೇಶ್, ಒಕ್ಕೂಟದ ಸಂಚಾಲಕ ಅನಿಲ್ ಹೊಸಕೊಪ್ಪ ಸೇರಿದಂತೆ ಹಲವು ಮುಖಂಡರು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.
eesanje/url_46_322_3.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮಹಾರಾಷ್ಟ್ರ ನಾಯಕರಿಗೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
2
+ ಬೆಂಗಳೂರು,ಅ.31- ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ಗಲಭೆಗಳು ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಂಭವನೀಯ ಗಲಭೆಯ ಕುರಿತು ಎಚ್ಚರಿಕೆವಹಿಸುವಂತೆ ಗಡಿ ಭಾಗದ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮಹಾರಾಷ್ಟ್ರದ ನಾಯಕರು ಬಂದು ತಂಟೆ ಮಾಡಿದರೆ ಸೂಕ್ತ ಕ್ರಮ ಜರುಗಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿಯಾದ ಬೆಳಗಾವಿ, ಬೀದರ್‍ನಲ್ಲಿನ ಪೊಲೀಸರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಎಲ್ಲಿ ಹೆಚ್ಚು ಗಲಾಟೆಯಾಗಬಹುದು ಎಂಬ ಮಾಹಿತಿ ಇರುವ ಭಾಗಗಳಿಗೆ ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಿದ್ದೇವೆ. ಬೆಳಗಾವಿಯಲ್ಲಿ ಎಂಇಎಸ್ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದ ವೇಳೆ ಕರಾಳ ದಿನಾಚರಣೆ ಮಾಡುತ್ತಾರೆ. ಅದಕ್ಕೆ ಮಹಾರಾಷ್ಟ್ರದಿಂದ ಸಚಿವರು, ನಾಯಕರು ಬಂದು ಪ್ರಚೋದಿತ ಹೇಳಿಕೆ ನೀಡುವ ಪ್ರಯತ್ನಗಳು ನಡೆದಿವೆ. ಅದನ್ನು ಪ್ರತಿವರ್ಷವೂ ನಿಯಂತ್ರಣ ಮಾಡುತ್ತೇವೆ ಎಂದರು.
4
+ ಮಹಾರಾಷ್ಟ್ರದ ಸಚಿವರಾಗಲಿ, ನಾಯಕರಗಲಿ ನಮ್ಮ ಗಡಿ ಪ್ರದೇಶ ಒಳಗೆ ಬಂದು ಕರ್ನಾಟಕ, ಕನ್ನಡ, ನಮ್ಮ ನೆಲ, ಜಲದ ಬಗ್ಗೆ ಗಲಾಟೆ ಮಾಡಿದರೆ ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
5
+ ಮಹಾರಾಷ್ಟ್ರದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಪತನವಾಗಲಿದೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಪ್ರತಿಯೊಬ್ಬ ಬಿಜೆಪಿ ಮುಖಂಡರು ಕಾಂಗ್ರೆಸ್ ಬಗ್ಗೆಯೇ ಮಾತನಾಡುತ್ತಾರೆ ವಿನಃ, ಅವರ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ. ಅವರಿಗೆ ನಮ್ಮ ಪಕ್ಷದ ಬಗ್ಗೆ ಆಸಕ್ತಿ ಹೆಚ್ಚಿದೆ. ಬಹುಶಃ ಕಾಂಗ್ರೆಸ್ ಕಡೆಗೆ ಬರಲು ಆಸಕ್ತಿ ತೋರಿಸುತ್ತಿದ್ದಾರೆನೋ ಗೋತ್ತಿಲ್ಲ. ಇಲ್ಲವಾದರೆ ನಮ್ಮ ಪಕ್ಷದ ಬಗ್ಗೆ ಅವರಿಗೆ ಅಷ್ಟೊಂದು ಆಸಕ್ತಿ ಏಕೆ. ಕಾಂಗ್ರೆಸ್‍ಗೆ ಬರುವವರಿದ್ದರೆ ಮೊದಲು ಹೇಳಲಿ. ನಂತರ ಅವರನ್ನು ಸೇರಿಸಿಕೊಳ್ಳಬೇಕೆ ಬೇಡವೇ ಎಂದು ಪರಿಶೀಲನೆ ನಡೆಸುತ್ತೇವೆ ಎಂದರು.
6
+ ಶಾಸಕರಾದಿಯಾಗಿ ಯಾರು ಅನವಶ್ಯಕವಾಗಿ ಹೇಳಿಕೆ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಹೈಕಮಾಂಡ್ ನಾಯಕರು ಪದೇ ಪದೇ ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಅದರ ಹೊರತಾಗಿಯೂ ಕೆಲವರು ಮಾತನಾಡುತ್ತಾರೆ. ಇಂತಹದ್ದನ್ನು ನೋಡಿಕೊಳ್ಳಲು ಎಐಸಿಸಿ ಶಿಸ್ತು ಸಮಿತಿಯಿದೆ, ತಾವು ಅದರಲ್ಲಿ ಸದಸ್ಯರಾಗಿದ್ದು, ರಾಜ್ಯದಲ್ಲೂ ಕೆಪಿಸಿಸಿ ಶಿಸ್ತು ಸಮಿತಿಯಿದೆ. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೈಕಮಾಂಡ್ ಕೆಪಿಸಿಸಿಗೆ ಸೂಚನೆ ನೀಡಿರಬಹುದು. ಅದರ ಹಿನ್ನೆಲೆಯಲ್ಲಿ ಕೆ.ಬಿ.ಕೋಳಿವಾಡ ನೇತೃತ್ವದ ಸಮಿತಿ ಎಚ್ಚರಿಕೆ ನೀಡಿರಬಹುದು ಎಂದರು. ಎಐಸಿಸಿಯ ಶಿಸ್ತು ಸಮಿತಿ ಸಭೆಯಲ್ಲೂ ಈ ರೀತಿಯ ಬೆಳವಣಿಗೆಗಳ ಬಗ್ಗೆ ಅನೇಕ ಬಾರಿ ಚರ್ಚೆಯಾಗಳಾಗಿವೆ ಎಂದರು.
7
+ ರಾಜಸ್ತಾನ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಎಪಿ ಅಭ್ಯರ್ಥಿ ಹೈದರಾಬಾದ್‍ನಲ್ಲಿ ಅರೆಸ್ಟ್
8
+ ನಮ್ಮ ಸಮುದಾಯದ ನಾಯಕರಿಗೆ ಸರ್ಕಾರ ಬದಲಾಯಿಸುವ ಶಕ್ತಿ ಇದೆ ಎಂದು ಮಾಜಿ ಶಾಸಕ ರಾಜವೆಂಟಕಪ್ಪ ನಾಯಕ ನೀಡಿರುವ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷರು ಗಮನಿಸುತ್ತಾರೆ. ಅಂತಹವನ್ನೇಲ್ಲಾ ನಿಯಂತ್ರಣ ಮಾಡುವ ಶಕ್ತಿ, ಸಾಮಥ್ರ್ಯ ಡಿ.ಕೆ.ಶಿವಕುಮಾರ್ ಅವರಿಗೆ ಇದೆ ಎಂದರು.
9
+ ಮೂವರು ಉಪಮುಖ್ಯಮಂತ್ರಿ ಮಾಡುವ ವಿಚಾರ ಹೈಕಮಾಂಡ್ ಬಿಟ್ಟದ್ದು. ವರಿಷ್ಠರು ಸಂದರ್ಭಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆ ವೇಳೆ ಅರ್ಹರು ಹಾಗೂ ಸಮುದಾಯಗಳಿಗೆ ಅವಕಾಶ ಸಿಗಬಹುದು ಎಂದರು.ದೀಪಾವಳಿಯ ನಂತರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮೂವತ್ತು ಮಂದಿ ಶಾಸಕರು ದುಬೈ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಬಿಜೆಪಿಯವರು ಮಾತ್ರ ಪ್ರವಾಸಕ್ಕೆ ಹೋಗುತ್ತಾರೆ ಎಂದರೆ ನಮಗೆ ಸಂಬಂಧವಿಲ್ಲ. ನಮ್ಮ ಪಕ್ಷದ ಶಾಸಕರು ಹೋಗುತ್ತಿದ್ದಾರೆ ಎಂದರೆ ಯಾವ ಕಾರಣಕ್ಕೆ ಹೋಗುತ್ತಿದ್ದಾರೆ. ಸುಮ್ಮನೆ ಆಹ್ಲಾದಕರ ಪ್ರವಾಸವೇ ಅಥವಾ ನಿಜವಾಗಿ ಏನಾದರೂ ವಿಷಯಗಳಿವೆಯೇ ಎಂಬುದನ್ನು ನೋಡಬೇಕಾಗುತ್ತದೆ. ದುಬೈನಲ್ಲಿ ಹಲವು ಕನ್ನಡ ಪರ ಸಂಘಟನೆಗಳಿವೆ, ಅಲ್ಲಿಂದ ಏನಾದರೂ ಆಹ್ವಾನ ಇದೆಯೇ ಎಂದು ಕೂಡ ಗಮಿಸಬೇಕಾಗುತ್ತದೆ. ಮೊದಲು ಅವರೆಲ್ಲಾ ಪ್ರವಾಸ ಹೊರಡಲಿ ನಂತರ ಪ್ರತಿಕ್ರಿಯಿಸುವುದು ಸೂಕ್ತ ಎಂದರು.
10
+ ರಾಜೀನಾಮೆ ನೀಡಲು ಸಿದ್ಧ:ಹೊಸಬರಿಗೆ ಅವಕಾಶ ನೀಡಲು ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದು ಹೈಕಮಾಂಡ್ ಸೂಚನೆ ನೀಡಿದರೆ ತಾವು ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ನೀಡಲು ಸಿದ್ಧ ಎಂದು ಪರಮೇಶ್ವರ್ ಹೇಳಿದ್ದಾರೆ.ಎಲ್ಲರೂ ಸಚಿವರಾಗುವುದು ಒಳ್ಳೆಯದು. ಎಲ್ಲರಿಗೂ ಅವಕಾಶ ಸಿಗಬೇಕು ಎಂಬುದಕ್ಕೆ ನಮ್ಮ ಬೆಂಬಲವಿದೆ. ಆದರೆ ಸಚಿವರನ್ನು ಇಲ್ಲಿನ ನಾವ್ಯಾರು ಮಾಡುವುದಿಲ್ಲ. ಎಲ್ಲವೂ ದೆಹಲಿಯವರೆ ನಿರ್ಧಾರ ಮಾಡುತ್ತಾರೆ.
11
+ ಅಂತಹ ಸಂದರ್ಭ ಬಂದು ಸೂಚನೆ ನೀಡಿದರೆ ನಾನು ಸಿದ್ಧನಿದ್ದೇನೆ. ಈ ಹಿಂದೆ ಗೃಹ ಸಚಿವನಾಗಿದ್ದನು ಅಕಾರ ಬಿಟ್ಟು ಪಕ್ಷದ ಕೆಲಸ ಮಾಡುತ್ತೇನೆ ಎಂದು ಹೋಗಿದ್ದೆ. ಈಗಲೂ ಅಂತಹ ಸಂದರ್ಭ ಬಂದರೆ ನಾನು ಸಿದ್ಧ ಎಂದರು. ತಾವು ಮುಖ್ಯಮಂತ್ರಿ ಸ್ಥಾನವನ್ನು ತ್ಯಾಗ ಮಾಡಿಲ್ಲ, ಸಚಿವ ಸ್ಥಾನವನ್ನು ಬಿಟ್ಟುಕೊಟ್ಟಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
12
+ ಅಂಬಾನಿಗೆ ಮತ್ತೆ ಜೀವ ಬೆದರಿಕೆ : 20 ಆಯ್ತು, 200 ಆಯ್ತು ಇದೀಗ 400 ಕೋಟಿಗೆ ಬೇಡಿಕೆ
13
+ ಬಿಜೆಪಿ ಆಪರೇಷನ್ ಕಮಲ ನಡೆಸಿಲ್ಲ, ನಾವೇ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದೇವು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅವರು ಹೇಳಿದ್ದಕ್ಕೆಲ್ಲಾ ಉತ್ತರಿಸುತ್ತಾ ಕುಳಿತರೆ ಅದಕ್ಕೆ ಕೊನೆಯೇ ಇರಲ್ಲ ಎಂದರು.