CoolCoder44 commited on
Commit
7db2320
·
verified ·
1 Parent(s): 8c59dd5

4b932f1a18fdd403f636c120110f3e3fa8292db427636879507c969820c2ba67

Browse files
Files changed (50) hide show
  1. eesanje/url_46_267_1.txt +11 -0
  2. eesanje/url_46_267_10.txt +8 -0
  3. eesanje/url_46_267_11.txt +12 -0
  4. eesanje/url_46_267_12.txt +12 -0
  5. eesanje/url_46_267_2.txt +8 -0
  6. eesanje/url_46_267_3.txt +8 -0
  7. eesanje/url_46_267_4.txt +6 -0
  8. eesanje/url_46_267_5.txt +10 -0
  9. eesanje/url_46_267_6.txt +10 -0
  10. eesanje/url_46_267_7.txt +5 -0
  11. eesanje/url_46_267_8.txt +11 -0
  12. eesanje/url_46_267_9.txt +9 -0
  13. eesanje/url_46_268_1.txt +9 -0
  14. eesanje/url_46_268_10.txt +8 -0
  15. eesanje/url_46_268_11.txt +5 -0
  16. eesanje/url_46_268_12.txt +10 -0
  17. eesanje/url_46_268_2.txt +9 -0
  18. eesanje/url_46_268_3.txt +8 -0
  19. eesanje/url_46_268_4.txt +11 -0
  20. eesanje/url_46_268_5.txt +5 -0
  21. eesanje/url_46_268_6.txt +6 -0
  22. eesanje/url_46_268_7.txt +8 -0
  23. eesanje/url_46_268_8.txt +6 -0
  24. eesanje/url_46_268_9.txt +9 -0
  25. eesanje/url_46_269_1.txt +9 -0
  26. eesanje/url_46_269_10.txt +6 -0
  27. eesanje/url_46_269_11.txt +7 -0
  28. eesanje/url_46_269_12.txt +13 -0
  29. eesanje/url_46_269_2.txt +6 -0
  30. eesanje/url_46_269_3.txt +7 -0
  31. eesanje/url_46_269_4.txt +6 -0
  32. eesanje/url_46_269_5.txt +6 -0
  33. eesanje/url_46_269_6.txt +7 -0
  34. eesanje/url_46_269_7.txt +6 -0
  35. eesanje/url_46_269_8.txt +8 -0
  36. eesanje/url_46_269_9.txt +17 -0
  37. eesanje/url_46_26_1.txt +7 -0
  38. eesanje/url_46_26_10.txt +7 -0
  39. eesanje/url_46_26_11.txt +10 -0
  40. eesanje/url_46_26_12.txt +5 -0
  41. eesanje/url_46_26_2.txt +12 -0
  42. eesanje/url_46_26_3.txt +9 -0
  43. eesanje/url_46_26_4.txt +9 -0
  44. eesanje/url_46_26_5.txt +6 -0
  45. eesanje/url_46_26_6.txt +7 -0
  46. eesanje/url_46_26_7.txt +8 -0
  47. eesanje/url_46_26_8.txt +6 -0
  48. eesanje/url_46_26_9.txt +12 -0
  49. eesanje/url_46_270_1.txt +6 -0
  50. eesanje/url_46_270_10.txt +15 -0
eesanje/url_46_267_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್
2
+ ಬೆಂಗಳೂರು,ಜ.9- ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಎಚ್ಚೆತ್ತುಕೊಂಡಿರುವ ಬಿಜೆಪಿ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಿಂಗಳ ಅಂತ್ಯಕ್ಕೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಮುಂದಾಗಿದೆ.
3
+ ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಹಾಲಿ ಸದಸ್ಯರೂ ಸೇರಿದಂತೆ ಆಕಾಂಕ್ಷಿಗಳ ಪಟ್ಟಿಯನ್ನು ಕಳುಹಿಸಿಕೊಡುವಂತೆ ಬಿಜೆಪಿ ಕೇಂದ್ರಚುನಾವಣಾ ಸಮಿತಿ ರಾಜ್ಯ ಘಟಕಕ್ಕೆ ಸೂಚನೆ ಕೊಟ್ಟಿದೆ. ಹೀಗಾಗಿ ಈ ತಿಂಗಳ ಅಂತ್ಯಕ್ಕೆ ದೆಹಲಿಗೆ ಸಂಭವನೀಯ ಪಟ್ಟಿ ರವಾನೆಯಾಗಲಿದೆ ಎಂದು ತಿಳಿದುಬಂದಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿಯ ಚುನಾವಣೆಯಲ್ಲಿ ಕೆಲವು ಸದಸ್ಯರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಯಿದೆ.
4
+ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ವಯಸ್ಸಿನ ಕಾರಣದಿಂದ ಕೆಲವು ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗಿರುವುದರಿಂದ ಒಂದೊಂದು ಕ್ಷೇತ್ರಕ್ಕೆ 5 ಕ್ಕೂ ಹೆಚ್ಚು ಸಂಭವನೀಯರ ಪಟ್ಟಿಯನ್ನು ಕಳುಹಿಸುವ ನಿರೀಕ್ಷೆಯಿದೆ.
5
+ ಚಿಕ್ಕಬಳ್ಳಾಪುರದಲ್ಲಿ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ಈ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಗಳನ್ನು ಹುಡುಕಬೇಕಾಗಿದೆ. ಮಾಜಿ ಸಚಿವ ಡಾ.ಕೆ.ಸುಧಾಕರ್, ಎಂ.ಟಿ.ಬಿ.ನಾಗರಾಜ್ ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿವೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟರೂ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದಲೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
6
+ ತುಮಕೂರಿನಲ್ಲಿ ಹಾಲಿ ಸಂಸದ ಬಸವರಾಜು ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಮಾಜಿ ಸಚಿವ ವಿ.ಸೋಮಣ್ಣ, ಮಾಜಿ ಸಂಸದ ಮುದ್ದಹನುಮೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಕ್ಷೇತ್ರದಿಂದಲೂ ಬಿಜೆಪಿ ಹೊಸಬರನ್ನೇ ಕಣಕ್ಕಿಳಿಸುವ ಅನಿವಾರ್ಯತೆಯಿದೆ. ಬಳ್ಳಾರಿಯಲ್ಲೂ ಹಾಲಿ ಸಂಸದ ದೇವೇಂದ್ರಪ್ಪ, ದಾವಣಗೆರೆಯ ಜಿ.ಎಂ.ಸಿದ್ದೇಶ್ವರ್, ಹಾವೇರಿಯ ಶಿವಕುಮಾರ್ ಉದಾಸಿ, ಬೆಳಗಾವಿಯ ಮಂಗಳ ಅಂಗಡಿ, ಚಾಮರಾಜನಗರದಿಂದ ವಿ.ಶ್ರೀನಿವಾಸ ಪ್ರಸಾದ್ ಸ್ರ್ಪಧಿಸುವುದಿಲ್ಲ ಎಂದು ಹೇಳಿರುವುದರಿಂದ ಸುಮಾರು 8 ರಿಂದ 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆಯಿದೆ.
7
+ ಉತ್ತರಾಖಂಡ್‍ನಲ್ಲಿ ಕ್ಲೋರಿನ್ ಸೋರಿಕೆ, ಸ್ಥಳಕ್ಕೆ ದೌಡಾಯಿಸಿದ ಎನ್‌ಡಿಆರ್‌ಎಫ್
8
+ ಬೆಂಗಳೂರು ಉತ್ತರದಿಂದ ಡಿ.ವಿ.ಸದಾನಂದಗೌಡ ಈ ಮೊದಲು ಸ್ರ್ಪಸುವುದಿಲ್ಲ ಎಂದು ಹೇಳಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಹೀ���ಾಗಿ ಕೊನೆ ಕ್ಷಣದವರೆಗೂ ಇಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಬೆಂಗಳೂರು ಸೆಂಟ್ರಲ್‍ನಿಂದ ಹಾಲಿ ಸಂಸದ ಪಿ.ಸಿ.ಮೋಹನ್‍ಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದಲ್ಲೇ ವಿರೋಧವಿದೆ. ಆದರೆ ಈಗ ಬಿಜೆಪಿ ಸಂಪೂರ್ಣವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿಯಂತ್ರಣಕ್ಕೆ ಬಂದಿರುವುದರಿಂದ ಮತ್ತೊಮ್ಮೆ ಅವರಿಗೆ ಟಿಕೆಟ್ ಸಿಕ್ಕರೂ ಅಚ್ಚರಿಯಿಲ್ಲ.
9
+ ಮಂಗಳೂರು ಕ್ಷೇತ್ರದಿಂದ ನಳಿನ್‍ಕುಮಾರ್ ಕಟೀಲ್‍ಗೂ ಟಿಕೆಟ್ ಕೈತಪ್ಪುವ ಸಾಧ್ಯತೆಗಳೇ ಹೆಚ್ಚಾಗಿವೆ. ಮಾಜಿ ಸಚಿವ ನಾಗರಾಜ್ ಶೆಟ್ಟಿ ಹಾಗೂ ಸಂಘ ಪರಿವಾರದ ಅರುಣ್ ಕುಮಾರ್ ಪುತ್ತಿಲ ಹೆಸರುಗಳು ಚಾಲ್ತಿಯಲ್ಲಿವೆ. ಹಾಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ, ಚಿಕ್ಕಮಗಳೂರು ಕ್ಷೇತ್ರವನ್ನು ಬದಲಾಯಿಸಲಿದ್ದಾರೆ ಎಂಬ ವದಂತಿ ಹಬ್ಬಿದೆ.
10
+ ಉತ್ತರ ಕನ್ನಡದಿಂದ ಅನಂತಕುಮಾರ್ ಹೆಗ್ಡೆಗೆ ಟಿಕೆಟ್ ಕೊಡುವ ಬಗ್ಗೆಯೂ ಭಾರೀ ವಿರೋಧವಿದೆ. ಹಿಂದೂ ಫೈಯರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಅವರಿಗೆ ಟಿಕೆಟ್ ನಿರಾಕರಿಸಿದರೆ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕವೂ ಇದೆ. ಬಾಗಲಕೋಟೆಯಿಂದ ಗದ್ದಿಗೌಡರ್, ನನಗೆ ಟಿಕೆಟ್ ಬೇಡ ಎಂದು ತಮ್ಮ ಆಪ್ತ ವಲಯದಲ್ಲಿ ಹೇಳಿಕೊಂಡಿದ್ದಾರೆ. ಹೀಗೆ ಹಲವು ಕ್ಷೇತ್ರಗಳಲ್ಲಿ ಒಂದಿಲ್ಲೊಂದು ಕಾರಣಗಳಿಂದ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಹೀಗಾಗಿ ಹೊಸ ಮುಖಗಳನ್ನು ಕಣಕ್ಕಿಳಿಸುವ ಅನಿವಾರ್ಯತೆ ಬಿಜೆಪಿಗಿದೆ.
11
+ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಎದುರಿಸುತ್ತಿರುವ ಮೊದಲ ಮಹಾ ಚುನಾವಣೆ ಇದಾಗಿರುವುದರಿಂದ 18 ರಿಂದ 20 ಕ್ಷೇತ್ರಗಳನ್ನು ಗೆದ್ದು ಅದರ ಶ್ರೇಯಸ್ಸನ್ನು ಬಿ.ವೈ.ವಿ ತಲೆಗೆ ಕಟ್ಟಲು ಪಕ್ಷದೊಳಗಿನ ಒಂದು ಬಣ ಸಜ್ಜಾಗಿದೆ.
eesanje/url_46_267_10.txt ADDED
@@ -0,0 +1,8 @@
 
 
 
 
 
 
 
 
 
1
+ ಬೆಂಗಳೂರಿನಿಂದ ಅಯೋಧ್ಯೆಗೆ ವಿಶೇಷ ರೈಲುಗಳ ವ್ಯವಸ್ಥೆ
2
+ ಬೆಂಗಳೂರು,ಜ.8- ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೇಶದ ವಿವಿಧೆಡೆಯಿಂದ ವಿಶೇಷ ರೈಲುಗಳನ್ನು ಬಿಡಲಾಗಿದೆ. ಅದೇ ರೀತಿ ಕರ್ನಾಟಕ ರಾಜಧಾನಿ ಬೆಂಗಳೂರಿನಿಂದಲೂ ಸಹ ವಿಶೇಷ ರೈಲುಗಳನ್ನು ಬಿಡಲು ಭಾರತೀಯ ರೈಲ್ವೆ ನಿರ್ಧರಿಸಿದೆ.
3
+ ಜನವರಿ 22ರಂದು ಉದ್ಘಾಟನೆ ಆಗುತ್ತಿರುವ ಅಯೋಧ್ಯೆ ಶ್ರೀರಾಮ ಮಂದಿರದ ಕಾರ್ಯಕ್ರಮದಲ್ಲಿ ಜನರು ಭಾಗವಹಿಸಲು ಅನುಕೂಲವಾಗಲೆಂದು ಈ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿ ನಿಂದಲೂ ರೈಲುಗಳು ಅಯೋಧ್ಯೆಗೆ ತೆರಳಲಿವೆ. ಬೆಂಗಳೂರು ಮತ್ತು ಅಯೋಧ್ಯೆ ಜಂಕ್ಷನ್ ನಡುವೆ ಹಲವಾರು ರೈಲುಗಳು ಸಂಚರಿಸುತ್ತವೆ. ಇದರಲ್ಲಿ ಹೆಚ್ಚಿನ ರೈಲು ಯಶವಂತಪುರ ಜಂಕ್ಷನ್‍ನಿಂದ ಅಯೋಧ್ಯೆಗೆ ಹೊರಡುತ್ತದೆ.
4
+ ಛತ್ತೀಸ್‍ಗಢದಲ್ಲಿ ಬಿಜೆಪಿ ನಾಯಕನ ಭೀಕರ ಹತ್ಯೆ
5
+ ಇದು ಭಾರತೀಯ ರೈಲ್ವೇ ಜಾಲದಲ್ಲಿ ಅತ್ಯಂತ ಜನನಿಬಿಡ ರೈಲು ಮಾರ್ಗಗಳಲ್ಲಿ ಒಂದಾಗಿದೆ. ಬೆಂಗಳೂರಿನಿಂದ ಅಯೋಧ್ಯೆಗೆ ತಡೆರಹಿತ ಪ್ರಯಾಣ ನಡೆಸಲು ಮುಂಚಿತವಾಗಿ ರೈಲ್ವೇ ಟಿಕೆಟ್ ಬುಕ್ ಮಾಡಬಹುದಾಗಿದೆ. ಪ್ರಯಾಣಿಕರು ಆಫ್‍ಲೈನ್ ಮತ್ತು ಆನ್‍ಲೈನ್ ಮೂಲಕ ಬೆಂಗಳೂರಿನಿಂದ ಅಯೋಧ್ಯೆಗೆ ರೈಲು ಟಿಕೆಟ್‍ಗಳನ್ನು ಬುಕ್ ಮಾಡಬಹುದಾಗಿದೆ.
6
+ ಭಾರತೀಯ ರೈಲ್ವೇಯ ಐಆರ್‍ಸಿಟಿಸಿ ವೆಬ್‍ಸೈಟ್ ಮೂಲಕ ಆನ್‍ಲೈನ್ ಬುಕಿಂಗ್ ಮಾಡಬಹುದು, ಅಲ್ಲಿ ಪ್ರಯಾಣಿಕರು ಆಸನ ಲಭ್ಯತೆಯನ್ನು ಪರಿಶೀಲಿಸಿ ಅನುಕೂಲಕರವಾದ ಟಿಕೆಟ್‍ಗಳನ್ನು ಬುಕ್ ಮಾಡಬಹುದು. ಐಆರ್‍ಸಿಟಿಸಿ ಅಧಿಕೃತ ರೈಲ್‍ಮಿತ್ರದ ಸಹಯೋಗದೊಂದಿಗೆ 450ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಇ-ಕೇಟರಿಂಗ್ ಸೇವೆಗಳನ್ನು ಒದಗಿಸಲಾಗಿದೆ.
7
+ ಇದರಲ್ಲಿ ಪ್ರಯಾಣಿಕರು ತಮ್ಮ ರೈಲು ಪ್ರಯಾಣದ ಸಮಯದಲ್ಲಿ ರೆಸ್ಟೋರೆಂಟ್‍ನ ಬಿಸಿ ಬಿಸಿ ಆಹಾರವನ್ನು ಸವಿಯಬಹುದಾಗಿದೆ. ರೈಲು ಸಂಖ್ಯೆ 15024 ಯಶವಂತಪುರ-ಗೋರಖ್‍ಪುರ ನಡುವೆ ಸಂಚರಿಸುವ ಎಕ್ಸ್‍ಪ್ರೆಸ್ ರೈಲು ಬೆಂಗಳೂರಿನ ಯಶವಂತಪುರದಿಂದ ರಾತ್ರಿ 11:40ಕ್ಕೆ ಹೊರಟು ಮರುದಿನ ಸಂಜೆ 04:26ಕ್ಕೆ ಅಯೋಧ್ಯೆ ತಲುಪಲಿದೆ. ರೈಲು ಸಂಖ್ಯೆ 22534 ಯಶವಂತಪುರ ಗೋರಖ್‍ಪುರ ನಡುವೆ ಎಕ್ಸ್‍ಪ್ರೆಸ್ ಈ ರೈಲು ಬೆಂಗಳೂರಿನ ಯಶವಂತಪುರದಿಂದ ರಾತ್ರಿ 11:40ಕ್ಕೆ ಹೊರಟು ಮರುದಿನ ಸಂಜೆ 03:50ಕ್ಕೆ ನಿಗೋರಖ್‍ಪುರವನ್ನು ತಲುಪುತ್ತದೆ.
8
+ ರೈಲು ಸಂಖ್ಯೆ 12592 ಯಶವಂತಪುರ ಗೋರಖ್‍ಪುರ ನಡುವೆ ಎಕ್ಸ್‍ಪ್ರೆಸ್ ರೈಲು ಬೆಂಗಳೂರಿನ ಯಶವಂತಪುರದಿಂದ ಸಂಜೆ 05:20ಕ್ಕೆ ಹೊರಟು ಮರುದಿನ ಸಂಜೆ 01:17ಕ್ಕೆ ನಿಗದಿತ ಸ್ಥಳವನ್ನು ತಲುಪುತ್ತದೆ. ಅಯೋಧ್ಯೆಗೆ ಸಾಮಾನ್ಯ ಟಿಕೆಟ್ ದರ ಬೆಲೆ 840.99 ರೂ. ಆಗಿದೆ. ಪ್ರಥಮ ದರ್ಜೆ ಟಿಕೆಟ್ ದರ 2,183.79 ರೂ. ಆಗಿದ್ದು, ಅಯೋಧ್ಯೆಗೆ ಮೊದಲ ರೈಲು ಬೆಳಗ್ಗೆ 3:10 ಆಗಿದ್ದು, ಕೊನೆಯ ರೈಲು ರಾತ್ರಿ 11:40ಕ್ಕೆ ಹೊರಡಲಿದೆ.
eesanje/url_46_267_11.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಅಭಿಮಾನಿಗಳ ಸಾವು
2
+ ಗದಗ,ಜ.8- ರಾಕಿಂಗ್ ಸ್ಟಾರ್ ಯಶ್ ಕಟೌಟ್ ಕಟ್ಟುತ್ತಿದ್ದಾಗ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಮೂವರು ಅಭಿಮಾನಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಯಶ್ ಹುಟ್ಟಹಬ್ಬದ ನಿಮಿತ್ತ ಅವರ ಅಭಿಮಾನಿಗಳು ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿಯಲ್ಲಿ 25 ಅಡಿ ಕಟೌಟ್ ಕಟ್ಟಲು ಮುಂದಾಗುತ್ತಿದ್ದಾಗ ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
3
+ ಸೂರಣಗಿಯ ನಿವಾಸಿಗಳಾದ ಹನುಮಂತ(21), ಮುರುಳಿ(20) ಮತ್ತು ನವೀನ್(21) ಮೃತ ದುರ್ದೈವಿಗಳು. ಘಟನೆಯಲ್ಲಿ ಇತರ ಮೂವರು ಅಭಿಮಾನಿಗಳಿಗೂ ತೀವ್ರವಾಗಿ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
4
+ ಛತ್ತೀಸ್‍ಗಢದಲ್ಲಿ ಬಿಜೆಪಿ ನಾಯಕನ ಭೀಕರ ಹತ್ಯೆ
5
+ ಘಟನೆ ವಿವರ:ಯಶ್ ಅವರ ಹುಟ್ಟುಹಬ್ಬದ ಅಂಗವಾಗಿ ಈ ಗ್ರಾಮದಲ್ಲಿ ಪ್ರತಿ ವರ್ಷದಂತೆ ಬೃಹತ್ ಕಟೌಟ್ ನಿರ್ಮಿಸಿ ಸೂರಣಗಿಯ ಯುವಕರು ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿ ಮನೆ ಮನೆಗೆ ಕೇಕ್ ಹಂಚುತ್ತಿದ್ದರಂತೆ. ಜ.8ರಂದು ಯಶ್ ಹುಟ್ಟುಹಬ್ಬ ಇದುದ್ದರಿಂದ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಸೂರಣಗಿ ಗ್ರಾಮದ 8 ಅಭಿಮಾನಿಗಳು ನೀಲಗಿರಿ ತೋಪಿನ ಬಳಿ ಹೋಗಿ ಕಬ್ಬಿಣದ ರಾಡು, ಹಸಿಮರ ಬಳಸಿ 25 ಅಡಿ ಎತ್ತರದ ಕಟೌಟ್ ನಿರ್ಮಿಸಿದ್ದರು. ನಂತರ ಅದನ್ನು ಕಟ್ಟಲು ಮೇಲೆತ್ತುತ್ತಿದ್ದಂತೆ ಸ್ಥಳದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
6
+ ಇವರ ಜೊತೆಯಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸುದ್ದಿ ತಿಳಿದು ಲಕ್ಷ್ಮೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎಸ್‍ಪಿ ನ್ಯಾಮೇಗೌಡ ಅವರು, ರಾತ್ರಿ ವೇಳೆಯಾದ್ದರಿಂದ ವಿದ್ಯುತ್ ತಂತಿ ಇರುವುದು ಯುವಕರ ಗಮನಕ್ಕೆ ಬಾರದಿರುವುದೇ ಈ ಘೋರ ದುರಂತಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
7
+ ಮುಗಿಲು ಮುಟ್ಟಿದ ಆಕ್ರಂದನ:ಯಶ್ ಹುಟ್ಟುಹಬ್ಬಕ್ಕೆ ಕಟೌಟ್ ಕಟ್ಟಲು ಹೋಗಿದ್ದ ಯುವಕರ ಪೈಕಿ ಮೂವರು ವಿದ್ಯುತ್ ಶಾಕ್‍ನಿಂದ ಮೃತಪಟ್ಟಿದ್ದಾರೆಂಬ ಸುದ್ದಿ ತಿಳಿದು ಸೂರಣಗಿ ಗ್ರಾಮಸ್ಥರೆಲ್ಲರೂ ಆಸ್ಪತ್ರೆ ಮುಂದೆ ಜಮಾಯಿಸಿ ರೋಸುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
8
+ ದೀದಿ ಟೀಕಿಸಿದ್ದ ಮಾಳವಿಯಾ ವಿರುದ್ಧ ದೂರು ದಾಖಲು
9
+ ಕಣ್ಣೀರಕೋಡ��ಯಲ್ಲಿ ಮುಳುಗಿದ ಗ್ರಾಮ:ಈ ಘನಘೋರ ದುರಂತಕ್ಕೆ ಊರಿಗೆ ಊರೇ ಮೌನವಾಗಿದೆ. ಇಡೀ ಸೂರಣಗಿ ಗ್ರಾಮ ಕಣ್ಣೀರಕೋಡಿಯಲ್ಲಿ ಮುಳುಗಿದೆ.
10
+ ಸಾಮೂಹಿಕ ಅಂತ್ಯ ಸಂಸ್ಕಾರ:ಇಂದು ಬೆಳಗ್ಗೆ ಸಾಮೂಹಿಕವಾಗಿ ಮೂವರು ಯುವಕರ ಅಂತ್ಯ ಸಂಸ್ಕಾರವನ್ನು ಗ್ರಾಮದಲ್ಲಿ ನೆರವೇರಿಸಲಾಯಿತು.
11
+ ಪರಿಹಾರಕ್ಕೆ ಸಿಎಂ ಜೊತೆ ಚರ್ಚೆ:ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ವಿದ್ಯುತ್ ಶಾಕ್‍ನಿಂದ ಮೂವರು ಯುವಕರು ಮೃತಪಟ್ಟಿರುವ ಬಗ್ಗೆ ಜಿಲ್ಲಾಕಾರಿ ಹಾಗೂ ಎಸ್.ಪಿ ಅವರಿಂದ ಮಾಹಿತಿ ಪಡೆದುಕೊಂಡಿದ್ದು, ಆ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
12
+ ಗದಗಕ್ಕೆ ಭೇಟಿ ನೀಡಿದಾಗ ಮೃತ ಯುವಕರ ಮನೆಗಳಿಗೆ ಹೋಗಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳುವುದಾಗಿ ಸಚಿವರು ತಿಳಿಸಿದ್ದಾರೆ.
eesanje/url_46_267_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಮನೆ ಸೇರಿ 10 ಕಡೆ ಇಡಿ ದಾಳಿ
2
+ ಬೆಂಗಳೂರು,ಜ.8- ಕೋಲಾರ ಹಾಗೂ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ನಡೆದ ನೇಮಕಾತಿ ಆಕ್ರಮ ಪ್ರಕರಣ ಸಂಬಂಧ ಮಾಲೂರು ಶಾಸಕ ಹಾಗೂ ಕೊಚಿಮಲ್ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡರ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
3
+ ಮಾಲೂರಿನ ಕೊಮ್ಮನಹಳ್ಳಿಯಲ್ಲಿರುವ ಇವರ ಮನೆ, ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್ ಕಚೇರಿ ಮತ್ತು ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ಕಚೇರಿಯಲ್ಲಿ ಪರಿಶೀಲನೆ ನಡೆಸಿ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
4
+ ಕೆ.ವೈ.ನಂಜೇಗೌಡ ಅವರ ಬೆಂಗಳೂರು ನಿವಾಸ, ಮಾಲೂರು ಕೋಚಿಮುಲ್ ಕಚೇರಿ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಲಾಗಿದ್ದು, ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
5
+ ನಂಜೇಗೌಡ ಅವರ ಆಪ್ತ ಸಹಾಯಕ ಹರೀಶ್, ಕೋಚಿಮುಲ್ ಹಾಲು ಒಕ್ಕೂಟದ ಎಂ.ಡಿ.ಗೋಪಾಲಮೂರ್ತಿ, ಆಡಳಿತ ವಿಭಾಗದ ವ್ಯವಸ್ಥಾಪಕ ನಾಗೇಶ್ ಸೇರಿ ವಿವಿಧ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ.
6
+ ಭಾರತೀಯ ಮೂಲದ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪ ಆತಂಕಕಾರಿ: ಲೀ
7
+ ನೇಮಕಾತಿ ಅವ್ಯವಹಾರದ ಸದ್ದು:ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಸಾಕಷ್ಟು ಅವ್ಯವಹಾರದ ಸದ್ದು ಮಾಡಿತ್ತು. ನೇಮಕಾತಿ ವೇಳೆ ಲಕ್ಷಾಂತರ ರೂ. ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಮತ್ತೊಂದು ಶಿಫಾರಸ್ಸು ಆಧಾರದ ಮೇಲೆ ನೇಮಕಾತಿ ಹಗರಣ ನಡೆದಿರುವ ವಾಸನೆ ಬರುತ್ತಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪಟ್ಟಿಯೊಂದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.
8
+ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 81 ಹುದ್ದೆಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು, ಇದಾದ ನಂತರ ಲಿಖಿತ ಪರೀಕ್ಷೆ ಸಹ ನಡೆದಿದ್ದು, ಇನ್ನೇನು ಸಂದರ್ಶನ ಮುಗಿದಿದ್ದು ಅಂತಿಮ ಪಟ್ಟಿ ಇನ್ನೆರೆಡು ದಿನಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ.
9
+ ಇಲ್ಲಿ ಕೆಲಸ ಬೇಕೆಂದರೆ ಖಡ್ಡಾಯವಾಗಿ ಒಕ್ಕೂಟದ ನಿರ್ದೇಶಕರು ಹಾಗೂ ಶಾಸಕರು ಕೆಲವು ಶಿಫಾರಸ್ಸು ಇರಬೇಕು ಎನ್ನುವ ಅಭ್ಯರ್ಥಿಗಳ ಹೆಸರ ಮುಂದೆ ಶಿಫಾರಸ್ಸು ಮಾಡಿರುವ ಮುಖಂಡರ ಹೆಸರಿರುವ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದ ಹಿನ್ನೆಲೆಯಲ್ಲಿ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಶಂಕೆ ಕೇಳಿ ಬಂದಿತ್ತು.
10
+ ಇನ್ನು ಶಿಫಾರಸ್ಸುಗಳ ಪಟ್ಟಿಯಲ್ಲಿ ಒಕ್ಕೂಟದ ನಿರ್ದೇಶಕರು ಸೇರಿ ಡಿಸಿಎಂ ಡಿಕೆ ಶಿವಕುಮಾರ್, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕೆಲ ನಿರ್ದೇಶಕರ ಹೆಸರು ಬರೆಯಲಾಗಿದೆ.
11
+ ಮೋದಿ ಟೀಕಿಸಿದ ಮಾಲ್ಡೀವ್ಸ್‌ಗೆ ತಿಳಿ ಹೇಳಿದ ಭಾರತ
12
+ ಒಂದೊಂದು ಹುದ್ದೆಗೆ ಸುಮಾರು 40ರಿಂದ 60 ಲಕ್ಷ ರೂ. ಪಡೆಯಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಟ್ಟು 81 ಹುದ್ದೆಗಳಿಗೆ ಸುಮಾರು 44 ಕೋಟಿಯಷ್ಟು ಸಂಗ್ರಹ ಮಾಡಲಾಗಿದೆ ಎನ್ನುವ ಆರೋಪವಿದೆ. ಸಾಮಾಜಿಕ ಜಾಲತಾಣದಲ್ಲಿ ಆಯ್ಕೆಯಾದ ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಸಂಸದ ಎಸ್.ಮುನಿಸ್ವಾಮಿ, ಮಾಜಿ ಸಚಿವ ಡಾ.ಕೆ.ಸುಧಾಕರ್ ಈ ಕುರಿತು ಭಾರೀ ಭ್ರಷ್ಟಾಚಾರ ನಡೆದಿರುವ ಬಗ್ಗೆ ಆರೋಪ ಮಾಡಿದ್ದರು.
eesanje/url_46_267_2.txt ADDED
@@ -0,0 +1,8 @@
 
 
 
 
 
 
 
 
 
1
+ ಇನ್ನೂ 3 ದಿನ ರಾಜ್ಯದಲ್ಲಿ ಮೋಡ ಕವಿದ ವಾತಾವರಣ
2
+ ಬೆಂಗಳೂರು, ಜ.9-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಕರಾವಾಳಿ ಹಾಗೂ ಮಲೆನಾಡು ಭಾಗದಲ್ಲಿ ಅರೆ ವ್ಯಾಪಕ ಪ್ರಮಾಣದ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಆದರೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
3
+ ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುವುದರಿಂದ ಹಗಲು ವೇಳೆಯೂ ಚಳಿಯ ಪ್ರಮಾಣ ಹೆಚ್ಚಾಗಿದೆ. ನಿನ್ನೆಯಿಂದ ರಾಜ್ಯದ ಒಳನಾಡಿನಲ್ಲಿ ಮೋಡ ಕವಿದ ವಾತಾವಾರಣವಿದ್ದು, ಆಗಾಗ್ಗೆ ಹಲವು ಕಡೆ ತುಂತುರು ಮಳೆಯಾಗಿದೆ.
4
+ ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡು ಹಾಗೂ ಕೇರಳದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇಲ್ಲ. ಕೆಲವೆಡೆ ಚದುರಿದಂತೆ ಹಗುರ ಇಲ್ಲವೆ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
5
+ ಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ, ಇಬ್ಬರು ಪೊಲೀಸರು ಬಲಿ
6
+ ತಮಿಳುನಾಡು ಕರಾವಳಿ ಸಮೀಪ ಉಂಟಾಗಿದ್ದ ವಾಯುಭಾರ ಕುಸಿತ ಕೇರಳದ ಕರಾವಳಿ ಕಡೆಗೆ ಚಲಿಸುತ್ತಿದೆ. ಇದರಿಂದ ಆ ಎರಡು ರಾಜ್ಯಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಕರ್ನಾಟಕದ ಮೇಲೆ ವಾಯುಭಾರ ಕುಸಿತದ ನೇರ ಪರಿಣಾಮವಿಲ್ಲ. ರಾಜ್ಯದ ಕರಾವಳಿಯಲ್ಲೂ ಸ್ವಲ್ಪ ಹೆಚ್ಚು ಮಳೆಯಾಗಲಿದೆ. ಹಾಗೆಯೇ ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ. ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದೂ, ಚಳಿಯ ಪ್ರಮಾಣವೂ ಹೆಚ್ಚಾಗಿರಲಿದೆ ಎಂದು ಹೇಳಿದರು.
7
+ ಶೇ.24ರಷ್ಟು ಮಳೆ ಕೊರತೆ:ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ 2023ನೇ ವರ್ಷದಲ್ಲಿ ವಾಡಿಕೆಗಿಂತ ಶೇ.24ರಷ್ಟು ಕಡಿಮೆ ಮಳೆ ರಾಜ್ಯದಲ್ಲಾಗಿದೆ. 2023ರ ಏಪ್ರಿಲ್‍ನಿಂದ ಡಿಸೆಂಬರ್ ನಡುವಿನ ಅವಯಲ್ಲಿ 1140 ಮಿ.ಮೀ.ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದರೆ, 862 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ಶೇ.24ರಷ್ಟು ಕೊರತೆ ಉಂಟಾಗಿತ್ತು.
8
+ ಅದೇ ರೀತಿ ಜನವರಿ ಒಂದರಿಂದ ಡಿಸೆಂಬರ್ ಅಂತ್ಯದವರೆಗೆ ವಾಡಿಕೆ ಮಳೆ ಪ್ರಮಾಣ 1153 ಮಿ.ಮೀ. ಆಗಿದ್ದು, ಕೇವಲ 872 ಮಿ.ಮೀ.ನಷ್ಟು ಮಳೆಯಾಗಿದೆ. ಈ ಅವಯಲ್ಲೂ ವಾಡಿಕೆಗಿಂತ ಶೇ.24ರಷ್ಟು ಮಳೆ ಕಡಿಮೆಯಾಗಿದೆ. ಅಲ್ಲದೆ, ಹಿಂಗಾರು ಹಂಗಾಮಿನ ಅಕ್ಟೋಬರ್ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ ವಾಡ��ಕೆ ಮಳೆ ಪ್ರಮಾಣ 182 ಮಿ.ಮೀ. ಆಗಿದ್ದು, 114 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ವಾಡಿಕೆಗಿಂತ ಶೇ.38ರಷ್ಟು ಕೊರತೆ ಉಂಟಾಗಿದೆ. ಡಿಸೆಂಬರ್‍ನಲ್ಲೀ ಶೇ.30 ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. 2024ರ ಮೊದಲ ಮಳೆ ನಿನ್ನೆ ಆರಂಭಗೊಂಡಿದೆ.
eesanje/url_46_267_3.txt ADDED
@@ -0,0 +1,8 @@
 
 
 
 
 
 
 
 
 
1
+ ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-01-2024)
2
+ ನಿತ್ಯ ನೀತಿ :ಸಮಸ್ಯೆ ಬಿಟ್ಟು ಬದುಕು ಅಥವಾ ಸಮಸ್ಯೆ ಪರಿಹರಿಸಿಕೊಂಡು ಬದುಕು. ಆದರೆ ಸಮಸ್ಯೆಯೊಂದಿಗೆ ಯಾವತ್ತೂ ಬದುಕಬೇಡ.
3
+ ಪಂಚಾಂಗ ಮಂಗಳವಾರ 09-01-2024ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಜ್ಯೇಷ್ಠ / ಯೋಗ: ವೃದ್ಧಿ / ಕರಣ: ಗರಜೆ
4
+ ಸೂರ್ಯೋದಯ : ಬೆ.06.44ಸೂರ್ಯಾಸ್ತ : 06.09ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ : 12.00-1.30
5
+ ರಾಶಿ ಭವಿಷ್ಯಮೇಷ: ಒತ್ತಡದ ಜೀವನದಿಂದ ಹೊರಬರುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ.ವೃಷಭ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವಿರಿ.ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತ ಗಳಿಂದ ಕೂಡಿರುತ್ತವೆ.
6
+ ಕಟಕ: ರಕ್ತ ಸಂಬಂಧಿಗಳ ವಿರೋಧ ಎದುರಿಸ ಬೇಕಾಗುತ್ತದೆ.ಸಿಂಹ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.ಕನ್ಯಾ: ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.
7
+ ತುಲಾ: ಹಿರಿಯ ಸಹೋದರ ಮತ್ತು ಸಹೋದರಿಯ ರೊಂದಿಗಿನ ಸಂಬಂಧವು ಬಲವಾಗಿರುತ್ತದೆ.ವೃಶ್ಚಿಕ: ಕೆಲವು ದಿನಗಳಿಂದ ಅನುಭವಿಸುತ್ತಿದ್ದ ಸಂಕಷ್ಟಗಳಿಗೆ ಮುಕ್ತಿ ದೊರೆಯಲಿದೆ.ಧನುಸ್ಸು: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.
8
+ ಮಕರ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆಒಳಗಾಗಬಹುದು.ಕುಂಭ: ದಿನವಿಡೀ ಬಿಡುವಿಲ್ಲದ ಕಾರ್ಯಗಳ ನಡುವೆ ಮಕ್ಕಳೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ.ಮೀನ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
eesanje/url_46_267_4.txt ADDED
@@ -0,0 +1,6 @@
 
 
 
 
 
 
 
1
+ ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಜೆಡಿಎಸ್ ನಾಯಕರ ಸಮಾಲೆಯೋಚನೆ
2
+ ಬೆಂಗಳೂರು,ಜ.8- ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತಂತೆ ಜೆ.ಪಿ.ಭವನದಲ್ಲಿಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ಸಭೆ ನಡೆಸಲಾಯಿತು. ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಮನ್ವಯತೆ ಕಾಪಾಡುವುದು, ಚುನಾವಣೆ ಸಿದ್ದತೆ, ಕ್ಷೇತ್ರ ಹಂಚಿಕೆ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
3
+ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರ ಅಭಿಪ್ರಾಯವನ್ನು ಕುರಿತು ಚುನಾವಣೆ ಕುರಿತಂತೆ ಸಮಾಲೋಚನೆ ಹಾಗೂ ಮಾರ್ಗದರ್ಶನ ನೀಡಲಾಯಿತು. ಎಲ್ಲೆಲ್ಲಿ ಜೆಡಿಎಸ್ ಪ್ರಾಬಲ್ಯವಿದೆಯೋ ಅಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ, ಈಗಲೇ ಚುನಾವಣಾ ತಯಾರಿ ನಡೆಸುವುದು, ಚುನಾವಣೆಯಲ್ಲಿ ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ಸೂಚಿಸುವುದು ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಯಿತು.
4
+ ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ : ವಿಜಯೇಂದ್ರ
5
+ ಸಭೆಯಲ್ಲಿ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಲೀಲಾದೇವಿ ಆರ್.ಪ್ರಸಾದ್, ಬಂಡೆಪ್ಪ ಕಾಶಂಪೂರ್, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಕರೆಮ್ಮ, ಶಾರದಾ ಪೂರ್ಯಾ ನಾಯಕ್, ತಿಪ್ಪೇಸ್ವಾಮಿ, ನೇಮಿರಾಜ ನಾಯಕ್, ಎ.ಮಂಜು, ಮಾಜಿ ಶಾಸಕರಾದ ವೈ.ಎಸ್.ವಿ.ದತ್ತ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ರಮೇಶ್ ಗೌಡ, ತಿಮ್ಮರಾಯಪ್ಪ ಹಾಗೂ ವಿವಿಧ ಜಿಲ್ಲಾಧ್ಯಕ್ಷರು ಪಾಲ್ಗೊಂಡಿದ್ದರು.
6
+ ಸಭೆಗೂ ಮುನ್ನ ಮಾತನಾಡಿದ ಕುಮಾರಸ್ವಾಮಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಚುನಾವಣೆ ಪೂರ್ವ ತಯಾರಿ ಕುರಿತಂತೆ ಶಾಸಕರು ಹಾಗೂ ಪಕ್ಷದ ಮುಖಂಡರ ಸಭೆ ಕರೆದು ಚರ್ಚಿಸಲಾಗುತ್ತಿದೆ ಎಂದು ಹೇಳಿದರು.
eesanje/url_46_267_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಚಿವರ ತಲೆ ದಂಡ
2
+ ಬೆಂಗಳೂರು,ಜ.8- ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲ್ಲದೇ ಇರುವ ಕ್ಷೇತ್ರಗಳ ಉಸ್ತುವಾರಿ ಸಚಿವರ ತಲೆದಂಡದ ಎಚ್ಚರಿಕೆ ರವಾನಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಆಯಾ ಉಸ್ತುವಾರಿಗಳೇ ಸಚಿವರಾಗಿದ್ದಾರೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ್, ಬಳ್ಳಾರಿ ಕ್ಷೇತ್ರಕ್ಕೆ ಬಿ.ನಾಗೇಂದ್ರ, ಬೀದರ್ ಕ್ಷೇತ್ರಕ್ಕೆ ಈಶ್ವರ್ ಖಂಡ್ರೆ, ಚಿಕ್ಕಮಗಳೂರು, ಉಡುಪಿ ಕ್ಷೇತ್ರಕ್ಕೆ ಕೆ.ಜೆ.ಜಾರ್ಜ್, ಚಿತ್ರದುರ್ಗ ಕ್ಷೇತ್ರಕ್ಕೆ ಸಚಿವ ಡಾ.ಸುಧಾಕರ್, ದಕ್ಷಿಣ ಕನ್ನಡ ಕ್ಷೇತ್ರಕ್ಕೆ ದಿನೇಶ್ ಗುಂಡೂರಾವ್, ದಾವಣಗೆರೆ ಕ್ಷೇತ್ರಕ್ಕೆ ಎಸ್.ಎಸ್.ಮಲ್ಲಿಕಾರ್ಜುನ್, ಧಾರವಾಡ ಕ್ಷೇತ್ರಕ್ಕೆ ಸಂತೋಷ್ ಲಾಡ್, ಕಲ್ಬುರ್ಗಿ ಕ್ಷೇತ್ರಕ್ಕೆ ಪ್ರಿಯಾಂಕ್ ಖರ್ಗೆ, ಹಾಸನ ಕ್ಷೇತ್ರಕ್ಕೆ ಕೆ.ಎನ್.ರಾಜಣ್ಣ, ಹಾವೇರಿ ಕ್ಷೇತ್ರಕ್ಕೆ ಶಿವಾನಂದ ಪಾಟೀಲ್, ಕೊಪ್ಪಳಕ್ಕೆ ಶಿವರಾಜ ತಂಗಡಗಿ, ಮಂಡ್ಯಕ್ಕೆ ಎನ್.ಚೆಲುವರಾಯಸ್ವಾಮಿ, ಶಿವಮೊಗ್ಗದ ಸಚಿವ ಮಧುಬಂಗಾರಪ್ಪ, ತುಮಕೂರಿನ ಡಾ.ಜಿ.ಪರಮೇಶ್ವರ್, ಉತ್ತರ ಕನ್ನಡದ ಮಂಕಾಳ್ ವೈದ್ಯ ಅವರಿಗೆ ಅದೇ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ.
3
+ ಬೆಂಗಳೂರು ಗ್ರಾಮಾಂತರಕ್ಕೆ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಬದಲಾಗಿ ಭೈರತಿ ಸುರೇಶ್, ಬೆಂಗಳೂರು ನಗರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಸ್ತುವಾರಿ ಸಚಿವರಾಗಿದ್ದರು. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕೃಷ್ಣಭೈರೇಗೌಡ, ಬೆಂಗಳೂರು ಕೇಂದ್ರಕ್ಕೆ ಜಮೀರ್ ಅಹಮ್ಮದ್ ಖಾನ್, ಬೆಂಗಳೂರು ದಕ್ಷಿಣಕ್ಕೆ ರಾಮಲಿಂಗಾರೆಡ್ಡಿ ಅವರುಗಳನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.
4
+ ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರ ಬದಲಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
5
+ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಆಕಾಂಕ್ಷಿಯಾಗುವ ಸಾಧ್ಯತೆ ಇದೆ. ಇಲ್ಲಿಗೆ ಸಿದ್ದರಾಮಯ್ಯ ಅವರ ಆಪ್ತ ಕೆ.ವೆಂಕಟೇಶ್ ವೀಕ್ಷಕರಾಗಿದ್ದಾರೆ. ಮೈಸೂರು ಜಿಲ್ಲೆಯ ಉಸ್ತುವಾರಿಯಾಗಿ ಎಚ್.ಸಿ.ಮಹದೇವಪ್ಪರ ಜವಾಬ್ದಾರಿ ಚಾಮರಾಜನಗರ ಕ್ಷೇತ್ರಕ್ಕೆ ಮೀಸಲಾಗಿದೆ. ಕೊಡಗು ಜಿಲ್ಲೆಯ ಉಸ್ತುವಾರಿಯಾಗಿರುವ ಎನ್.ಎಸ್.ಬೋಸರಾಜು ಅವರಿಗೆ ಸ್ವಂತ ಜಿಲ್ಲೆ ರಾಯಚೂರಿನ ಜವಾಬ್ದಾರಿ ವಹಿಸಲಾಗಿದೆ.
6
+ ಸಂಸದೆ ಸುಮಲತಾರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ..? : ಹೆಚ್‌ಡಿಕೆ
7
+ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಡಾ.ಎಂ.ಸಿ.ಸುಧಾಕರ್ ಸಚಿವರಾಗಿದ್ದರೆ ಅವರ ಬದಲಾಗಿ ಕೋಲಾರದ ಮೂಲದವರಾದ ಕೆ.ಎಚ್.ಮುನಿಯಪ್ಪ ಅವರನ್ನು, ಕೋಲಾರಕ್ಕೆ ಡಾ.ಎಂ.ಸಿ.ಸುಧಾಕರ್ ಅವರುಗಳನ್ನು ಉಸ್ತುವಾರಿಗಳಾಗಿ ಅದಲು ಬದಲು ಮಾಡಲಾಗಿದೆ. ಬೆಳಗಾವಿ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಚಿಕ್ಕೋಡಿ ಕ್ಷೇತ್ರಕ್ಕೆ ಹಿರಿಯ ಸಚಿವ ಎಚ್.ಕೆ.ಪಾಟೀಲ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.
8
+ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಯಾದಗಿರಿ ಜಿಲ್ಲೆಯ ಉಸ್ತುವಾರಿ ಶರಣ ಬಸಪ್ಪ ದರ್ಶನಾಪೂರ್ ಅವರಿಗೆ ಲೋಕಸಭೆ ಕ್ಷೇತ್ರಗಳ ವೀಕ್ಷಕರ ಜವಾಬ್ದಾರಿ ನೀಡಲಾಗಿಲ್ಲ. 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಪಕ್ಷ ಕ್ಷೇತ್ರವಾರು ವೀಕ್ಷಕರ ನೇಮಕಾತಿ ಜೊತೆಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲೇಬೇಕು ಎಂಬ ಕಟ್ಟುನಿಟ್ಟಿನ ಸೂಚನೆ ನೀಡಿದೆ.
9
+ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೀಕ್ಷಕರಾಗಿರುವ ಸಚಿವರ ಮೇಲೆ ನಿಗಾ ವಹಿಸಲಿದ್ದು, ಕಾಲಕಾಲಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಲಾಗಿದೆ.
10
+ ಜುಲೈನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಚರ್ಚೆಗಳಿದ್ದು, ಲೋಕಸಭೆ ಚುನಾವಣೆಯಲ್ಲಿ ಉದ್ದೇಶಪೂರ್ವಕವಾದ ಸೋಲಿಗೆ ಸಚಿವರ ತಲೆದಂಡ ಮಾಡಿ ಹೊಸಬರಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
eesanje/url_46_267_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಪ್ರತಿಯಾಗಿ ಸಂವಿಧಾನ ಯಾತ್ರೆಗೆ ರಾಜ್ಯ ಸರ್ಕಾರ ಸಿದ್ಧತೆ
2
+ ಬೆಂಗಳೂರು,ಜ.8- ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಸೆಡ್ಡು ಹೊಡೆಯುವಂತೆ ರಾಜ್ಯಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸಂವಿಧಾನ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ ಸಂಘಟನಾ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆಗಳಾಗಿವೆ.
3
+ ಜನವರಿ 26 ರಿಂದ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಆಯೋಜಿಸಲು ನಿರ್ಧರಿಸಲಾಗಿದೆ. ಈ ಜಾಥಾ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸುತ್ತಿದ್ದು, ಸಂವಿಧಾನದ ಮಹತ್ವ, ರಾಷ್ಟ್ರದ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧ ಚಿತ್ರಗಳನ್ನೊಳಗೊಂಡಿರಲಿದೆ. ಒಂದು ತಿಂಗಳ ಕಾಲ ನಡೆಯುವ ಯಾತ್ರೆಯ ಸಮಾರೋಪ ಸಮಾವೇಶ ಫೆಬ್ರವರಿ 24 ಹಾಗೂ 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
4
+ ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ : ವಿಜಯೇಂದ್ರ
5
+ ಜೊತೆಗೆ ಅಲ್ಲಲ್ಲಿ ವಿಚಾರ ಸಂಕಿರಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ವಿವಿಧ ವಿಷಯಗಳ ಕುರಿತು ಪರಿಣಿತರ ಚರ್ಚೆಯನ್ನು ಆಧರಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಗೆ ತಿಳಿಸಿದೆ.
6
+ ಸಮಾವೇಶಕ್ಕಾಗಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಮಾಹಿತಿಪೂರ್ಣ ಚರ್ಚಾಗೋಷ್ಠಿಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇಂದಿನ ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಸಂವಿಧಾನದಲ್ಲಿ ಉತ್ತರವಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶ ಎಂದು ಸಭೆಯಲ್ಲಿ ತಿಳಿಸಿದ್ದಾರೆ.
7
+ ಕೇಂದ್ರ ಸರ್ಕಾರ ತನ್ನ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಡಿಸೆಂಬರ್‍ನಿಂದ ಜನವರಿ 26 ರವರೆಗೆ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯಡಿ ರಾಜ್ಯಾದ್ಯಂತ ಸಾವಿರಾರು ಗ್ರಾಮಗಳಿಗೆ, ನಗರ ಪ್ರದೇಶಗಳಿಗೆ ತಲುಪಿವೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಭಾಗವಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.ಪರಿಣಾಮ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದ ಅಧಿಕಾರಿಗಳನ್ನು ಬಳಸಿಕೊಂಡು ಯಾತ್ರೆಯನ್ನು ಯಶಸ್ವಿಗೊಳಿಸಲಿದೆ. ಜನವರಿ 26 ಕ್ಕೆ ವಿಕಸಿತ ಯಾತ್ರೆ ಸಮಾರೋಪಗೊಳ್ಳಲಿದೆ.
8
+ ಅದರ ಬೆನ್ನಲ್ಲೇ ರಾಜ್ಯಸರ್ಕಾರ ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಅರಿವು ಮೂಡಿಸಲು ರಾಷ್ಟ್ರದ ಐಕ್ಯತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಸಂವಿಧಾನ ಆ ಯಾತ್ರೆಯನ್ನು ಆಯೋಜನೆಗೊಳಿಸಿದೆ.
9
+ ಯಶ್ ಕಟೌಟ್‍ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ
10
+ ಇಂದಿನ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹಾಗೂ ಸಚಿವರಾದ ಹೆಚ್.ಕೆ.ಪಾಟೀಲ, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲï.ಕೆ. ಅತೀಕ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಹಾಗೂ ಇತರ ಹಿರಿಯ ಅಕಾರಿಗಳು ಭಾಗವಹಿಸಿದ್ದರು.
eesanje/url_46_267_7.txt ADDED
@@ -0,0 +1,5 @@
 
 
 
 
 
 
1
+ ಕಲುಷಿತ ನೀರು ಸೇವಿಸಿ ಮಹಿಳೆ ಸಾವು, ನಗರಸಭೆ ಆಯುಕ್ತ ಸೇರಿ ಮೂವರ ಅಮಾನತು
2
+ ಬೆಂಗಳೂರು : ವಿಜಯನಗರ ಜಿಲ್ಲೆ ಹೊಸಪೇಟೆ ನಗರಸಭೆಯ ಕಾರಿಗನೂರಿನ ವಾರ್ಡ್ ನಲ್ಲಿ ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥಗೊಂಡು ಸೀತಮ್ಮ ಎಂಬುವವರು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಆಯುಕ್ತರಾದ ಬಂಡಿ ವಡ್ಡರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್ ಹಾಗೂ ಕಿರಿಯ ಅಭಿಯಂತರ ಖಾಜಿ ಅವರನ್ನು ಅಮಾನತುಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
3
+ ಬಿಲ್ಕಿಸ್‍ಬಾನು ಪ್ರಕರಣ : ಗುಜರಾತ್ ಸರ್ಕಾರಕ್ಕೆ ಸುಪ್ರೀಂನಲ್ಲಿ ಮುಖಭಂಗ
4
+ ಮೂವರು ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಇಲಾಖಾ ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಿವಾಕರ್ ಅವರ ಜತೆ ನಿರಂತರ ಸಂಪರ್ಕ ದಲ್ಲಿದ್ದು ಮಾಹಿತಿ ಪಡೆದು ಪ್ರಕರಣ ಮರು ಕಳಿಸದಂತೆ ಎಲ್ಲ ರೀತಿಯ ಮುನ್ನಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.
5
+ ಕುಡಿಯುವ ನೀರು ಪೊರೈಕೆ ಹಾಗೂ ಒಳಚರಂಡಿ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ನಿಗಾ ವಹಿಸುವಂತೆಯೂ ನಿರ್ದೇಶನ ನೀಡಿದ್ದಾರೆ
eesanje/url_46_267_8.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಬಿಜೆಪಿಗೆ ಎನ್.ಆರ್.ರಮೇಶ್ ಗುಡ್‍ಬೈ..!?
2
+ ಬೆಂಗಳೂರು,ಜ.8- ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿರುವ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಬಿಜೆಪಿಗೆ ಗುಡ್‍ಬೈ ಹೇಳಲು ಮುಂದಾಗಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ಸರ್ಕಾರಿ ನೆಲಗಳ್ಳರು ಮತ್ತು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರಗಳ ವಿರುದ್ಧ ನೂರಾರು ಪತ್ರಿಕಾಗೋಷ್ಠಿಗಳನ್ನು ಮಾಡಿದ್ದಷ್ಟೇ ಅಲ್ಲದೇ, ನೂರಾರು ಪ್ರಕರಣಗಳನ್ನು ದಾಖಲೆಗಳ ಸಹಿತ ವಿವಿಧ ತನಿಖಾ ಸಂಸ್ಥೆಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ದಾಖಲಿಸಿರುವ ಮತ್ತು ಸರ್ಕಾರಿ ನೆಲಗಳ್ಳರು ಕಬಳಿಸಿದ್ದ ಸಾವಿರಾರು ಕೋಟಿ ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ವಾಪಸ್ಸು ಸರ್ಕಾರದ ವಶಕ್ಕೆ ಬರುವಂತೆ ಮಾಡಿರುವ ರಮೇಶ್ ಅವರು ಬಿಜೆಪಿಯ ರಾಜ್ಯ ನಾಯಕರಿಂದ ನಿರಂತರವಾಗಿ ತಮಗೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಸಿಡಿದೆದ್ದಿದ್ದಾರೆ ಎಂದು ತಿಳಿದುಬಂದಿದೆ.
3
+ ಕನಿಷ್ಠ ತಿಂಗಳಿಗೆ ಎರಡು ಹಗರಣಗಳನ್ನಾದರೂ ಬಯಲಿಗೆಳೆಯುತ್ತಿದ್ದ ರಮೇಶ್ ಅವರು ಕಳೆದ ಏಳೆಂಟು ತಿಂಗಳಿನಿಂದ ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಯಾವುದೇ ಧ್ವನಿಯನ್ನೂ ಎತ್ತದೆ ಮತ್ತು ದೂರುಗಳನ್ನು ದಾಖಲಿಸದೆ ಮಮೌನಿಯಾಗಿರುವುದರ ಹಿಂದೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ.
4
+ 2018 ಮತ್ತು 2023 ರ ವಿಧಾನಸಭೆ ಚುನಾವಣೆಗಳ ಸಂದರ್ಭಗಳಲ್ಲಿ ಅವರು ಬಯಲಿಗೆಳೆದಿದ್ದ ಹಗರಣಗಳನ್ನೇ ಪುಸ್ತಕಗಳ ರೂಪದಲ್ಲಿ ಹೊರತಂದು ಕಾಂಗ್ರೆಸ್ ವಿರುದ್ಧದ ಪ್ರಚಾರದಲ್ಲಿ ಪ್ರಬಲ ಅಸ್ತ್ರವನ್ನಾಗಿಸಿಕೊಂಡಿದ್ದ ಬಿಜೆಪಿಯು ಎರಡೂ ಚುನಾವಣೆಗಳಲ್ಲಿ ಚಿಕ್ಕಪೇಟೆ ಮತ್ತು ಜಯನಗರ ಕ್ಷೇತ್ರಗಳ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು.
5
+ ಆದರೆ ಪಕ್ಷದ ವರಿಷ್ಠರು ಅವರಿಗೆ ಟಿಕೆಟ್ ನೀಡದಿರುವುದು ರಮೇಶ್ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಅವರ ಸಾವಿರಾರು ಅಭಿಮಾನಿಗಳು ಮತ್ತು ಕುಟುಂಬಸ್ಥರು ಇಷ್ಟೊಂದು ಅನ್ಯಾಯ ಮಾಡಿರುವ ಬಿಜೆಪಿಯಲ್ಲಿ ಇರುವುದು ಸರಿಯಲ್ಲ ಎಂದು ಒತ್ತಾಯಿಸುತ್ತಿದ್ದು, ನಿಮ್ಮ ರಾಜಕೀಯ ಜೀವನವನ್ನು ಹಾಳುಗೆಡವಿರುವ ಬೆಂಗಳೂರಿನ ಬಿಜೆಪಿ ನಾಯಕರಿಗೆ ಸರಿಯಾದ ಪಾಠ ಕಲಿಸಬೇಕು ನೀವು ಈ ಕೂಡಲೇ ಬಿಜೆಪಿಯಿಂದ ಹೊರಬಂದು ಬಿಜೆಪಿ ನಾಯಕರ ಹಗರಣಗಳನ್ನು ಬಯಲಿಗೆಳೆದು ದೂರುಗಳನ್ನು ದಾಖಲಿಸುವ ಮೂಲಕ ಸರಿಯಾದ ಪಾಠ ಕಲಿಸಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.
6
+ ಅಭಿಮಾನಿಗಳು ಹಾಗೂ ಹಿತೈಷಿಗಳ ಒತ್ತಡಕ್ಕೆ ಮಣಿದಿರುವ ರಮೇಶ್ ಅವರು ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ತಯಾರಿ ಆರಂಭಿಸಿದ್ದಾರೆ ಎಂದು ಮೂಲಗಳು ಈ ಸಂಜೆಗೆ ಖಚಿತಪಡಿಸಿವೆ. ಟಿಕೆಟ್ ವಂಚಿತರಾಗಿದ್ದ ರಮೇಶ್ ಅವರನ್ನು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿಯಿಂದ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ರ್ಪಧಿಸುವಂತೆ ಆ ಪಕ್ಷಗಳ ನಾಯಕರು ಆಹ್ವಾನ ನೀಡಿದ್ದರು. ಡಿ.ಕೆ ಶಿವಕುಮಾರ್ ಅವರಂತೂ ರಮೇಶ್ ಅವರನ್ನು ಕಾಂಗ್ರೆಸ್ಸಿನಿಂದ ಪದ್ಮನಾಭನಗರ ಕ್ಷೇತ್ರದಲ್ಲಿ ಅಶೋಕ್ ಅವರ ವಿರುದ್ಧ ಸ್ಪರ್ಧೆಗೆ ಇಳಿಸಬೇಕೆಂದು ನಾಮಪತ್ರ ಸಲ್ಲಿಕೆಯ ಕೊನೆಯ ದಿನದವರೆಗೂ ಕಾದಿದ್ದರು.
7
+ ಬಿಲ್ಕಿಸ್‍ಬಾನು ಪ್ರಕರಣ : ಗುಜರಾತ್ ಸರ್ಕಾರಕ್ಕೆ ಸುಪ್ರೀಂನಲ್ಲಿ ಮುಖಭಂಗ
8
+ ಹಾಗೆಯೇ, ಕಳೆದ ಏಳೆಂಟು ತಿಂಗಳಿನಿಂದ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ನಿರಂತರವಾಗಿ ರಮೇಶ್ ಜೊತೆ ಸಂಪರ್ಕದಲ್ಲಿದ್ದು, ಲೋಕಸಭೆ ಚುನಾವಣೆಯ ಮುಂಚಿತವಾಗಿಯೇ ಕಾಂಗ್ರೆಸ್ ಸೇರುವಂತೆ ಅವರ ಮನವೊಲಿಸುವ ಯತ್ನ ಮಾಡುತ್ತಿದ್ದಾರೆ ಎಂದು ಖಚಿತ ಮೂಲಗಳು ತಿಳಿಸಿವೆ.
9
+ ಒಂದು ವೇಳೆ ರಮೇಶ್ ಅವರು ಪಕ್ಷ ತೊರೆಯಲು ನಿರ್ಧರಿಸಿದ್ದೇ ಆದರೆ, ಭಾರತೀಯ ಜನತಾ ಪಾರ್ಟಿಗೆ ಬಹಳಷ್ಟು ನಷ್ಟ ಉಂಟಾಗುವುದಲ್ಲದೇ, ಆ ಪಕ್ಷದ ನಾಯಕರು ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಬಿಜೆಪಿ ನಾಯಕರುಗಳಿಗೆ ನಿರಂತರವಾದ ಸಂಕಷ್ಟಗಳು ಬಂದೊದಗುತ್ತವೆ ಎಂಬುದರಲ್ಲಿ ಎರಡು ಮಾತಿಲ್ಲ.ಇದೇ ರೀತಿ ಅನ್ಯಾಯ ಮುಂದುವರೆದರೆ ಮುಂದೆ ತಮಗೆ ಉಪಯೋಗಕ್ಕೆ ಬರಬಹುದೆಂಬ ದೂರ ದೃಷ್ಟಿಯಿಂದ ರಮೇಶ್ ಅವರು ತಮ್ಮದೇ ಪಕ್ಷದ ನಾಯಕರ ಹಗರಣಗಳು ಮತ್ತು ಸರ್ಕಾರಿ ಭೂಕಬಳಿಕೆ ಪ್ರಕರಣಗಳಿಗೆ ಸಂಬಂಧಿಸಿದ ನೂರಾರು ದಾಖಲೆಗಳನ್ನು ಈಗಾಗಲೇ ಸಂಗ್ರಹಿಸಿಕೊಂಡಿದ್ದಾರೆ ಎನ್ನಲಾಗಿದೆ.
10
+ ರಮೇಶ್ ಅವರ ಆಪ್ತರಾಗಿರುವ ಗಣೇಶ್, ನವೀನ್ ಮತ್ತು ರಾಜೇಶ್ ರವರನ್ನು ಸಂಪರ್ಕಿಸಿದಾಗ ಹೌದು ನಾವುಗಳೆಲ್ಲೆ ನಮ್ಮ ನಾಯಕರು ಬಿಜೆಪಿಯಲ್ಲಿ ಮುಂದುವರೆಯುವುದು ಬೇಡ. ನಿಮಗೆ ಇಷ್ಟೊಂದು ಅನ್ಯಾಯ ಮಾಡಿರುವ ಪಕ್ಷದ ನಾಯಕರಿಗೆ ಸರಿಯಾದ ಪಾಠ ಕಲಿಸಲೇಬೇಕು. ಹಾಗಾಗಿ ನೀವು ಭಾರತೀಯ ಜನತಾ ಪಾರ್ಟಿಯಿಂದ ಹೊರಬಂದು ನಿಮಗಿಷ್ಟವಾದ ರಾಜಕೀಯ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಿ ಅಥವಾ ಹೋರಾಟಗಾರರಾಗಿಯೇ ಮುಂದುವರೆದು ಬಿಜೆಪಿ ಪಕ್ಷದ ನಾಯಕರಿಗೆ ಸರಿಯಾದ ಬುದ್ಧಿ ಕಲಿಸಿ ಎಂದು ಒತ್ತಾಯಿಸುತ್ತಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಈ ಕುರಿತಂತೆ ಪ್ರತಿಕ್ರಿಯೆ ನೀಡಲು ರಮೇಶ್ ನಿರಾಕರಿಸಿದ್ದಾರೆ.
11
+ ರಮೇಶ್ ಅವರ ಮೇಲೆ ಹಲವಾರು ಬಾರಿ ಹತ್ಯಾ ಯತ್ನಗಳು ನಡೆದರೂ ಸಹ ಎದೆಗುಂದದೆ ನಿರಂತರವಾಗಿ ಭ್ರಷ್ಟರ ವಿರುದ್ಧ ಸಮರ ಸಾರಿ ಹಲವಾರು ಪ್ರಕರಣಗಳಲ್ಲಿ ಕಾನೂನು ಹೋರಾಟಗಳ ಮೂಲಕ ಜಯವನ್ನೂ ಗಳಿಸಿರುವ ವಿಷಯವನ್ನು ಅವರ ವಿರೋಧಿಗಳೂ ಸಹ ಒಪ್ಪಿಕೊಳ್ಳುತ್ತಾರೆ. ಇಂತಹ ನಿರ್ಭೀತ ವ್ಯಕ್ತಿತ್ವದ ಹೋರಾಟಗಾರರನ್ನು ಕಳೆದುಕೊಂಡರೆ ಬಿಜೆಪಿ ಪಕ್ಷಕ್ಕೆ ಅನ್ಯಾಯವಾಗೊದಂತೂ ಖಚಿತ ಎನ್ನುತ್ತಿದ್ದಾರೆ ಅವರ ಅಭಿಮಾನಿಗಳು.
eesanje/url_46_267_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಯಶ್ ಕಟೌಟ್‍ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ
2
+ ಬೆಂಗಳೂರು,ಜ.8- ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಸೂರಣಗಿ ಗ್ರಾಮದಲ್ಲಿ ನಟ ಯಶ್ ಕಟೌಟ್ ಕಟ್ಟುವ ಸಂದರ್ಭದಲ್ಲಿ ವಿದ್ಯುತ್‍ಸ್ಪರ್ಶದಿಂದಾಗಿ ಮೂವರು ಅಭಿಮಾನಿಗಳು ಮೃತಪಟ್ಟ ಬಳಿಕ ಫ್ಲೆಕ್ಸ್, ಬ್ಯಾನರ್, ಕಟೌಟ್‍ಗಳ ಎತ್ತರ, ಆಕಾರ, ಅಳತೆಗಳ ಬಗ್ಗೆ ಮಾರ್ಗಸೂಚಿ ನಿಗದಿ ಮಾಡುವ ಕುರಿತಂತೆ ಚರ್ಚೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತಪಟ್ಟವರ ಕುಟುಂಬದ ಸದಸ್ಯರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲು ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲು ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ ಎಂದು ಹೇಳಿದರು.
4
+ ಈ ನಡುವೆ ನಟ ಯಶ್ ಅವರು ತಮ್ಮೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ್ದು, ಸ್ಥಳಕ್ಕೆ ತೆರಳುತ್ತಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಯಶ್ ಕೂಡಾ ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ನಿರೀಕ್ಷೆಗಳಿವೆ ಎಂದು ಸಚಿವರು ತಿಳಿಸಿದರು. ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಯಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಎತ್ತರದ ಫ್ಲೆಕ್ಸ್ ಮಾಡಿಸಿ ಅದರಲ್ಲಿ ರಾಡ್ ಅಳವಡಿಸಲಾಗಿದ್ದು, ಅದು ವಿದ್ಯುತ್ ತಂತಿಗೆ ತಗುಲಿದ್ದರಿಂದ ಮೂವರು ವಿದ್ಯುತ್ ಶಾಕ್‍ನಿಂದ ಮೃತಪಟ್ಟಿದ್ದು, ಉಳಿದ ಮೂವರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ.
5
+ ಅವರಲ್ಲಿ ಒಬ್ಬ ಗುಣಮುಖನಾಗುತ್ತಿದ್ದಾನೆ. ಉಳಿದಿಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದರು.ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಅಗತ್ಯ ನೆರವು ನೀಡಿದ್ದಾರೆ. ಘಟನೆ ದುರ್ದೈವಕರ. ಮೃತಪಟ್ಟವರೆಲ್ಲಾ 15 ರಿಂದ 20 ವರ್ಷದೊಳಗಿನವರು. ಬಡ ಕುಟುಂಬದ ಪರಿಶಿಷ್ಟ ಜಾತಿಯ ಯುವಕರು ಮೃತಪಟ್ಟಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
6
+ ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಅಭಿಮಾನಿಗಳ ಸಾವು
7
+ ಆಸ್ಪತ್ರೆಯಲ್ಲಿರುವವರಿಗೆ ಅಗತ್ಯ ಚಿಕಿತ್ಸೆ ಕೊಡಿಸಲಾಗುವುದು. ಕಟೌಟ್, ಫ್ಲೆಕ್ಸ್, ಬ್ಯಾನರ್‍ಗಳ ಬಗ್ಗೆ ಈವರೆಗೂ ಯಾವುದೇ ನಿಯಮಾವಳಿಗಳಿಲ್ಲ. ಎತ್ತರದ ಕಟೌಟ್‍ನಿಂದಾಗಿಯೇ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಕುರಿತು ಚರ್ಚೆ ನಡೆಸಲು ಇದು ಸೂಕ್ತ ಸಂದರ್ಭವಾಗಿದೆ. ಹೀಗಾಗಿ ರಾಜ್ಯಸರ್ಕಾರ ಸ್ಪಷ್ಟ ಮಾರ್ಗಸೂಚಿಗಳ ಬಗ್ಗೆ ಚಿಂತನೆ ನಡೆಸಲಿದೆ ಎಂದು ತಿಳಿಸಿದರು.
8
+ ಬೆಳಗಾವಿ ಎಂದಿಗೂ ಮಹಾರಾಷ್ಟ್ರಕ್ಕೆ ಸೇರಿರಲಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಹೇಳಿಕೆ ತಪ್ಪು ಮಾಹಿತಿಯಿಂದ ಕೂಡಿರಬಹುದು ಎಂದು ಎಚ್.ಕೆ.ಪಾಟೀಲ್ ಸ್ಪಷ್ಟಪಡಿಸಿದರು. ಭಾಷಾವಾರು ಪ್ರಾಂತ್ಯ ವಿಂಗಡಣೆಗೂ ಮೊದಲು ಮುಂ��ೈ ಪ್ರಾಂತ್ಯ ಅಸ್ತಿತ್ವದಲ್ಲಿತ್ತು. ಆಗ ಬೆಳಗಾವಿ ಸೇರಿದಂತೆ ರಾಜ್ಯದ ಹೈದ್ರಾಬಾದ್ ಕರ್ನಾಟಕವೂ ಸೇರಿದಂತೆ ಹಲವು ಪ್ರದೇಶಗಳು ಮುಂಬೈ ಪ್ರಾಂತ್ಯದ ಭಾಗವಾಗಿದ್ದವು. ಏಕೀಕರಣದ ಬಳಿಕ ರಾಜ್ಯ ವಿಂಗಡಣೆಯಾದಾಗ ಬೆಳಗಾವಿ ಕರ್ನಾಟಕದ ಭಾಗವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
9
+ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಈ ರೀತಿ ಹೇಳಿಕೆ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿರುವ ಸಾಧ್ಯತೆಗಳಿವೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
eesanje/url_46_268_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಸರ್ಕಾರಕ್ಕೆ ಅಧಿಕಾರದ ಮದವೇರಿದೆ : ಬೊಮ್ಮಾಯಿ
2
+ ಹುಬ್ಬಳ್ಳಿ,ಜ.7- ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಸರ್ಕಾರ ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ.
3
+ ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ. ಕರ್ನಾಟಕದಲ್ಲಿ ಜನರಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಕೇಸ್ ಒಂದು. ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಒಳಗಡೆ ಹಾಕಿದರು. ಇದು ಎಮರ್ಜೆನ್ಸಿಯಲ್ಲಿ ಮಾತ್ರ ಸಾಧ್ಯ ಎಂದರು.
4
+ ಶ್ರೀಕಾಂತ್ ಪೂಜಾರಿ ಅವರನ್ನು ಒಳಗಡೆ ಹಾಕಿದ ಅಧಿಕಾರಿ, ಮಂತ್ರಿಗಳು ಕ್ಷಮೆ ಕೇಳಲಿಲ್ಲ. ಇದನ್ನು ಜನರು ಗಮನಿಸುತ್ತಿದ್ದಾರೆ. ಏಳೇ ತಿಂಗಳಲ್ಲಿ ಈ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ. ಸರ್ಕಾರದ ದಾಷ್ಟ್ಯ ಹೆಚ್ಚಾಗಿದೆ. ಈ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದರು.
5
+ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿದ್ದೆ : ವಿಜಯೇಂದ್ರ
6
+ ನಾಳೆ (ಸೋಮವಾರ) ಪಕ್ಷದ ಚಿಂತನ ಮಂಥನ ಇದೆ, ಅಲ್ಲಿ ಪಕ್ಷದ ಎಲ್ಲ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಹೋರಾಟದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಕಾಂಗ್ರೆಸ್‍ನವರಿಗೆ ರಾಮ ಮಂದಿರ ಆಗಬಾರದು ಅನ್ನುವ ಆಸೆ ಇತ್ತು. ಆದರೆ, ಭವ್ಯವಾದ ರಾಮಮಂದಿರ ನಿರ್ಮಾಣವಾಗಿದೆ. ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗೋಧ್ರಾ ಮಾದರಿಯ ಗಲಾಟೆ ನಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತಾರೆ. ಅದೇ ರೀತಿ ಇಂಡಿಯಾ ಒಕ್ಕೂಟದ ನಾಯಕರೂ ರೈಲಿನಲ್ಲಿ ಪ್ರಯಾಣ ಮಾಡಬೇಡಿ ಎಂದು ಜನರಿಗೆ ಹೇಳುತ್ತಿದ್ದಾರೆ. ದೇಶದಲ್ಲಿ ಮೋದಿಯವರು ಪ್ರಧಾನಿಯಾಗಿದ್ದಾರೆ.
7
+ ಯಾವುದೇ ರೀತಿಯ ಸಣ್ಣ ಗಲಭೆಗೂ ಅವಕಾಶ ಕೊಡುವುದಿಲ್ಲ. ಸುರಕ್ಷಿತವಾಗಿ, ವೈಭವಯುತವಾಗಿ ರಾಮಮಂದಿರ ಉದ್ಘಾಟನೆಯಾಗಲಿದೆ ಎಂದರು. ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸಂದರ್ಭ ಬಂದರೆ ಹರಿಪ್ರಸಾದ್ ಅವರಿಂದ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಗಲಭೆಯಾದ ಮೇಲೆ ಇವರು ಮಾಹಿತಿ ಪಡೆದುಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಅಕಸ್ಮಾತ್ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದರು.
8
+ ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್
9
+ ಪುನೀತ್ ಕೆರೆಹಳ್ಳಿ ಬಳಸಿ ಕೋಮು ಗಲಭೆಗೆ ಬಿಜೆಪಿ ಪತ್ವಾ ಹೊರಡಿಸಿದೆ ಎಂದು ಆರೋಪಿಸಿರುವ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಪುನಿತ್ ಕೆರೆಹಳ್ಳಿ ಸೇರಿದಂತೆ ಯಾವುದೇ ಪ್ರಕರಣದಲ್ಲಿ ಕಾಂಗ್ರೆಸ್ ಜನರಲ್ಲಿ ಕೋಮು ಭಾವನೆ ಹುಟ್ಟು ಹಾಕುವ ಕೆಲಸ ಮಾಡುತ್ತಿದೆ. ಬಿಜೆಪಿಯನ್ನು ಕೋಮುವಾದಿ ಎಂದು ಆರೋಪಿಸುವ ಕಾಂಗ್ರೆಸ್ ನಿಜವಾದಿ ಕೋಮುವಾದಿ ಎಂದು ಆರೋಪಿಸಿದರು.
eesanje/url_46_268_10.txt ADDED
@@ -0,0 +1,8 @@
 
 
 
 
 
 
 
 
 
1
+ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿಲ್ಲ : ಡಿಕೆಶಿ
2
+ ಬೆಂಗಳೂರು,ಜ.7- ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ಇಲ್ಲ. ಹೀಗಾಗಿ ಇಲ್ಲಿಂದಲೇ ಪ್ರಾರ್ಥನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.22 ರಂದು ನಡೆಯುತ್ತಿರುವ ಕಾರ್ಯಕ್ರಮಕ್ಕೆ ನನಗಾಗಲೀ, ನಮ್ಮ ಮುಖ್ಯಮಂತ್ರಿಗಾಗಲೀ ಆಹ್ವಾನ ಇಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಆಹ್ವಾನ ಇದೆಯೇ ಎಂದು ಕೇಳಿದ್ದೇನೆ. ಕಾಂಗ್ರೆಸ್ ಪಕ್ಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆ, ಬೇಡವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
3
+ ನಾವು ಹಿಂದೂಗಳು. ನಮ್ಮ ಮನೆಯ ಗೋಡೆಯ ಮೇಲೆ ದೇವರ ಫೋಟೋಗಳು ಇದ್ದೇ ಇರುತ್ತವೆ. ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದರು. ಆರ್‍ಎಸ್‍ಎಸ್‍ನವರು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಮಂತ್ರಾಕ್ಷತೆ ನೀಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ನೀಡಿದ ಅಕ್ಕಿಗೆ ಅರಿಶಿನ ಸೇರಿಸಿದರೆ ಮಂತ್ರಾಕ್ಷತೆಯಾಗುತ್ತದೆ. ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ವಾದಿಸುವ ಬಿಜೆಪಿಯವರು ಕೇಂದ್ರದಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂಬುದನ್ನ ಮರೆತಿದ್ದಾರೆ.
4
+ ಬಾಂಗ್ಲಾ ಸಾರ್ವತ್ರಿಕ ಚುನಾವಣೆ, ಬಿಗಿ ಭದ್ರತೆ ನಡುವೆ ಮತದಾನ
5
+ ಕಾಯ್ದೆ ಜಾರಿಗೆ ಬರುವ ಮುನ್ನವೇ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅನ್ನಭಾಗ್ಯವನ್ನು ಜಾರಿಗೊಳಿಸಿದರು. 10 ಕೆ.ಜಿ. ನೀಡುತ್ತಿದ್ದ ಅಕ್ಕಿಯನ್ನು ಬಿಜೆಪಿಯವರು ಕಡಿತ ಮಾಡಿದ್ದನ್ನು ಮರೆಯಬಾರದು ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಪಕ್ಷದ ಅಂತ್ಯವಾಗುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಸದ್ಯಕ್ಕೆ ಅದಕ್ಕೆ ಉತ್ತರ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷದ 138 ವರ್ಷಗಳಾಗಿವೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ 135 ಮಂದಿ, ಕಾಂಗ್ರೆಸ್ ಬೆಂಬಲಿತ ಮೇಲ್ಕೋಟೆಯ ಶಾಸಕರು ಸೇರಿ 136 ಮಂದಿ ಗೆದ್ದಿದ್ದೇವೆ. ಹರಪ್ಪನಹಳ್ಳಿ ಮತ್ತು ಗೌರಿಬಿದನೂರಿನ ಪಕ್ಷೇತರ ಶಾಸಕರು ಕಾಂಗ್ರೆಸ್‍ಗೆ ಬೆಂಬಲ ನೀಡಿರುವುದರಿಂದ 138 ಮಂದಿ ಶಾಸಕರಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು.
6
+ ಬಿಜೆಪಿ, ಜೆಡಿಎಸ್‍ನವರು ಪದೇಪದೇ ನಮ್ಮನ್ನು ನೆನಪಿಸಿಕೊಳ್ಳಬೇಕು. ಅವರ ಟೀಕೆಗಳು ನಮಗೆ ಆಶೀರ್ವಾದ ಎಂದು ತಿಳಿಸಿದರು. ಡಿಜೆ ಹಳ್ಳಿ/ಕೆಜೆ ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಬಂತ ಅಮಾಯಕರನ್ನು ಬಿಡುಗಡೆ ಮಾಡುವಂತೆ ಕುಟುಂಬ ಸದಸ್ಯರು ನಿನ್ನೆ ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ್ದಾರೆ. ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
7
+ ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
8
+ ನೈಸ್ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರ ಅವರ ಬಾಯಿ ಕಟ್ಟಿ ಹಾಕಲಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಬಗ್ಗೆ ಸದ್ಯಕ್ಕೆ ಮಾತನಾಡುವುದಿಲ್ಲ. ವಿಧಾನಸಭೆಯಲ್ಲಿ ಚರ್ಚೆಗೆ ಬನ್ನಿ ಎಂದರೆ ಏಕೆ ಹಿಂದೇಟು ಹಾಕಿದರು. ಬೇರೆ ದಿನ ಈ ವಿಚಾರವಾಗಿ ಚರ್ಚೆ ಮಾಡೋಣ. ಸದ್ಯಕ್ಕೆ ಕೃಷ್ಣ ಮೇಲ್ದಂಡೆ ವಿಚಾರಕ್ಕಷ್ಟೇ ತಾವು ಸೀಮಿತವಾಗುವುದಾಗಿ ತಿಳಿಸಿದರು.
eesanje/url_46_268_11.txt ADDED
@@ -0,0 +1,5 @@
 
 
 
 
 
 
1
+ ಜ.22ರಂದು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ
2
+ ಬೆಂಗಳೂರು, ಜ.7-ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯ ಜರುಗಲಿದೆ. ಈ ನಿಟ್ಟಿನಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.
3
+ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ನಿರ್ದೇಶನ ನೀಡಿದ್ದಾರೆ. ಪ್ರಾಣ ಪ್ರತಿಷ್ಠಾಪನಾ ಸಮಯವಾದ ಹನ್ನೆರಡು ಗಂಟೆ 29 ನಿಮಿಷ 8 ಸೆಕೆಂಡ್‍ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ಮಹಾಮಂಗಳಾರತಿ ನಡೆಸಿ ದೇಶ, ರಾಜ್ಯಕ್ಕೆ ಶ್ರೀರಾಮನ ರಕ್ಷಣೆ ಇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸೂಚಿಸಲಾಗಿದೆ.
4
+ ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ
5
+ ಜನವರಿ 22ರಂದು 51 ಇಂಚು ಎತ್ತರದ ರಾಮಲಲ್ಲಾ ವಿಗ್ರಹವು ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ. ವಿಗ್ರಹಕ್ಕೆ ಜನವರಿ 16ರಿಂದ ಮಸ್ತಕಾಭಿಷೇಕ ಪ್ರಾರಂಭವಾಗಲಿದೆ. ಏಳು ದಿನಗಳ ಕಾಲ ಈ ಧಾರ್ಮಿಕ ಕೈಂಕರ್ಯ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈಗಾಗಲೇ ತಿಳಿಸಿದೆ.
eesanje/url_46_268_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ನೈಸ್ ಯೋಜನೆ ವಾಪಸ್ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ..? : ಜೆಡಿಎಸ್
2
+ ಬೆಂಗಳೂರು, ಜ.7- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಸಿದ್ದರಾಮಯ್ಯ ಅವರು ಕರ್ನಾಟಕದ ಸೊಕ್ಕಿನ ಮನುಷ್ಯ ಎಂದು ಟೀಕಾಪ್ರಹಾರ ನಡೆಸಿದೆ. ಅಲ್ಲದೆ, ಬಿಎಂಐಸಿ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ ಎಂದು ಪ್ರಶ್ನಿಸಿದೆ.
3
+ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ. ದೇಶವನ್ನುಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಜೆಡಿಎಸ್ ತಿರುಗೇಟು ನೀಡಿದೆ.
4
+ ಗೌಡರ ಕೈ ಅನುಗ್ರಹದ ದ್ಯೋತಕ:ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ.ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ, ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯನವರೇ? ಎಂದು ಜೆಡಿಎಸ್ ಪ್ರಶ್ನಿಸಿದೆ.
5
+ ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಕಾರ ಧೋರಣೆ, ತುಘಲಕ್ ಮನಃಸ್ಥಿತಿ. ದೇವೇಗೌಡರು ಸಾಮಾಜಿಕ ನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ. ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ಅಪರ ಬ್ರೂಟಸ್ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು ಎಂದು ಜೆಡಿಎಸ್ ತೀವ್ರ ಟೀಕಾ ಪ್ರಹಾರ ನಡೆಸಿದೆ.
6
+ ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ
7
+ ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ, ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋಗುವ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ ಎಂದಿದೆ.
8
+ ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ:ನಿಮ್ಮಂಥ ಆತ್ಮಸಾಕ್ಷಿ ಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ಸಿದ್ದಾರಮೆ ಆಟ ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ. ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ಸೊಕ್ಕಿನ ಮನುಷ್ಯ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
9
+ ಜನಾದೇಶವನ್ನು ದೇವೇಗೌಡರು ಎಂದೂ ಕ್ಕರಿಸಿಲ್ಲ. ಶಿರಸಾ ವಹಿಸಿದ್ದಾರೆ. ಅಂತಹ ಆಚಾರ, ವಿಚಾರ, ಸದ್ವಿಚಾರ, ಶಿಷ್ಟಾಚಾರವನ್ನು ನಿಮಗೆ ಕಲಿಸಿದ್ದೇ ಅವರು. ಆದರೆ, ಅಡ್ಡದಾರಿ ಆಯ್ಕೆ ಮಾಡಿಕೊಂಡ ನಿಮಗೆ ಇವೆಲ್ಲೆ ರುಚಿಸುತ್ತಿಲ್ಲ. ಸದ್ಯಕ್ಕೆ ನಿಮಗೆ ನೆಲ ಕಾಣುತ್ತಿಲ್ಲ. ನೆಲವೇ ಬುದ್ಧಿ ಕಲಿಸುವ ಕಾಲ ಹತ್ತಿರದಲ್ಲಿದೆ. ಕಾಲ ಕ್ಷಣಿಕ. ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲೆ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್. ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ ಎಂದು ಆರೋಪಿಸಿದೆ.
10
+ ನೈಸ್ ಗೆಅತೀಂದ್ರ ಶಕ್ತಿ ಅಡ್ಡವಾಗಿ ಕೂತಿದೆಯಾ?ದೇವೇಗೌಡರು ಕೇಳಿದ್ದು ನೈಸ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಿರಿ ಎಂದು. ಅವರು ಅದನ್ನೇ ಆಗ್ರಹಿಸಿ ಪತ್ರ ಬರೆದಿದ್ದರು. ನೀವು ಆ ವಿಷಯಕ್ಕೆ ಬರುತ್ತಿಲ್ಲ. ಸತ್ಯದ ಸೊಲ್ಲೆತ್ತದೆ ಸೈಲೆಂಟಾಗಿ ನೈಸ್ ಅನ್ನು ಪಕ್ಕಕ್ಕೆ ಸರಿಸುತ್ತಿದ್ದೀರಿ. ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ ಅತೀಂದ್ರ ಶಕ್ತಿ ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ ಎಂದು ಜೆಡಿಎಸ್ ಒತ್ತಾಯ ಮಾಡಿದೆ.
eesanje/url_46_268_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಬೆಳಗಾವಿ : ಅನ್ಯಕೋಮಿನ ಯುವಕರಿಂದ ಅಕ್ಕ-ತಮ್ಮನಿಗೆ ಚಿತ್ರಹಿಂಸೆ
2
+ ಬೆಳಗಾವಿ,ಜ.7- ಪ್ರೇಮಿಗಳೆಂದು ಭಾವಿಸಿ ಅಕ್ಕ-ತಮ್ಮನ ಮೇಲೆ ಅನ್ಯಕೋಮಿಯ ಯುವಕರು ರಾಡ್‍ನಿಂದ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿರುವ ಘಟನೆ ಇಲ್ಲಿನ ಕೋಟೆಕೆರೆ ಬಳಿ ನಡೆದಿದೆ. ಬೆಳಗಾವಿ ತಾಲೂಕಿನ ನಿವಾಸಿಗಳಾದ 24 ವರ್ಷದ ಯುವತಿ, 21 ವರ್ಷದ ಯುವಕ ಯುವನಿ ಅರ್ಜಿ ಸಲ್ಲಿಸಲು ಬಂದಿದ್ದರು.
3
+ ಈ ವೇಳೆ ಯುವತಿ ಮುಖಕ್ಕೆ ಬಟ್ಟೆ ಕಟ್ಟಿದ್ದಳು. ಯುವಕ ಹಣೆಗೆ ತಿಲಕ ಇಟ್ಟುಕೊಂಡಿದ್ದನು. ಇವರನ್ನು ಕಂಡ ಅನ್ಯಕೋಮಿನ 16 ಜನ ಯುವಕರ ಗ್ಯಾಂಗ್ ಹಿಂದೂ ಯುವಕ, ಮುಸ್ಲಿಂ ಯುವತಿ ಪ್ರೇಮಿಗಳೆಂದು ಥಳಿಸಿದ್ದಾರೆ. ನಂತರ ಅವರನ್ನು ಎಳೆದೊಯ್ದು ಹತ್ತಿರವೊಂದರ ಕೊಠಡಿಯಲ್ಲಿ ಕೂಡಿ ಹಾಕಿ ರಾಡ್‍ನಿಂದ ಹಲ್ಲೆ ನಡೆಸಿದ್ದಾರೆ.
4
+ ಈ ವೇಳೆ ಯುವತಿಯನ್ನು ಎಳೆದಾಡಿ ಮಾನಭಂಗಕ್ಕೂ ಪ್ರಯತ್ನಿಸಲಾಗಿದೆ. ಸುಮಾರು 3 ಗಂಟೆಗಳ ಕಾಲ ಈ ದುರುಳರು ಅವರಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ನಂತರ ಯುವತಿ ಬಳಿ ಇದ್ದ ಯುವತಿ ಮೊಬೈಲ್‍ನಿಂದ ಕುಟುಂಬಸ್ಥರಿಗೆ ಕರೆ ಮಾಡಿದ್ದಾರೆ. ಆಗ ಕುಟುಂಬಸ್ಥರು ಅವರಿಬ್ಬರು ಸಹೋದರಿ, ಸಹೋದರರು ಅಂತ ಹೇಳಿದರೂ ನಂಬದೆ, ಮೊಬೈಲ್ ಸ್ವೀಚ್ ಆಫ್ ಮಾಡಿ ಮತ್ತೆ ಸುಳ್ಳು ಹೇಳುತ್ತಿದ್ದೀರಿ ಎಂದು ಮನಬಂದಂತೆ ಥಳಿಸಿದ್ದಾರೆ.
5
+ ಆತಂಕಗೊಂಡ ಕುಟುಂಬಸ್ಥರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೊಬೈಲ್ ಲೊಕೇಶನ್ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಇಬ್ಬರನ್ನೂ ರಕ್ಷಿಸಿದ್ದಾರೆ. ಒಟ್ಟು 16 ಮಂದಿಯ ಗ್ಯಾಂಗ್‍ನಲ್ಲಿ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಗಂಭೀರ ಗಾಯಗೊಂಡ ಯುವಕ ಮತ್ತು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
6
+ ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್
7
+ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಮಾನಭಂಗಕ್ಕೆ ಪ್ರಯತ್ನ, ಜಾತಿನಿಂದನೆ, ಪ್ರಾಣ ಬೆದರಿಕೆ ಹಲವು ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ದೊಡ್ಡಮನ ಮಗನ ಜೊತೆ ಯುವತಿ ಯುವನಿಧಿ ಅರ್ಜಿ ಸಲ್ಲಿಸಲು ಅವರು ಕಚೇರಿಗೆ ಬಂದಿದ್ದರು. ಈ ವೇಳೆ ಒಂದು ಗಂಟೆ ಬಿಟ್ಟು ಬರುವಂತೆ ಅವರಿಗೆ ಸಿಬ್ಬಂದಿಗಳು ಹೇಳಿದರು. ಆದ್ದರಿಂದಾಗಿ ಅವರು ಹತ್ತಿರದಲ್ಲಿದ್ದ ಕೋಟೆಕೆರೆ ಬಳಿಯ ಕಟ್ಟೆಯ ಮೇಲೆ ಕುಳಿತು ಮಾತನಾಡುವಾಗ ಈ ಅನ್ಯಕೋಮಿನ ಯುವಕರು ದಾಳಿ ನಡೆಸಿ ಅಮಾನುಷವಾಗಿ ನಡೆದುಕೊಂಡಿದ್ದಾರೆ.
8
+ ನಗರ ಪ್ರಕ್ಷುಬ್ಧ:ಘಟನೆ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ನೈತಿಕ ಪೊಲೀಸ್‍ಗಿರಿ ಎಂದು ಹೇಳಿ ಹಿಂದೂ ಯುವಕರನ್ನು ಟಾರ್ಗೆಟ್ ಮಾಡಲಾಗುತ್ತದೆ. ಈಗ ನಗರದಲ್ಲಿ ಅಕ್ಕ-ತಮ್ಮನ ಮೇಲೆ ಮೃಗದ ರೀತಿ ವರ್ತಿಸಿರುವ ಅನ್ಯಕೋಮಿನ ಗ್ಯಾಂಗ್‍ನ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ. ಇಲ್ಲಿನ ಕಾಂಗ್ರೆಸ್ ಶಾಸಕರು ಮೌನವಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
9
+ ರಾಜ್ಯಾದ್ಯಂತ ಈ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದು, ಬೆಳಗಾವಿ ನಗರ ಈ ಘಟನೆಯಿಂದ ಪ್ರಕ್ಷುಬ್ದವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ.
eesanje/url_46_268_3.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ಕೋಮು-ಗಲಭೆ ಸಂಚು ನಡೆಯುತ್ತಿದೆ : ಕಾಂಗ್ರೆಸ್ ದೂರು
2
+ ಬೆಂಗಳೂರು,ಜ.7- ರಾಜ್ಯದಲ್ಲಿ ಕೋಮು ಗಲಭೆ ಹೆಚ್ಚಿಸಲು ಸಂಚು ನಡೆಸಿರುವ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ದೂರು ನೀಡಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ದಲ್ಲಿ ಬಿಜೆಪಿ ನಾಯಕರ ಆಕ್ಷೇಪಾರ್ಹ ಫೋಟೋಗಳನ್ನ ಪ್ರಕಟಿಸಿರುವುದರ ವಿರುದ್ಧ ದೂರು ನೀಡುತ್ತಿದ್ದಂತೆ ಕಾಂಗ್ರೆಸ್ ಕೂಡ ಚುರುಕಾಗಿದ್ದು ಬಿಜೆಪಿ ಮತ್ತು ಅದರ ಪಕ್ಷದ ಬೆಂಬಲಿಗರ ವಿರುದ್ಧ ದೂರು ನೀಡಲಾರಂಭಿಸಿದೆ.
3
+ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಅಧ್ಯಕ್ಷರಾದ ಬಿ.ಎಲ್.ಚೇತನ್ ಹಲಸೂರು ಗೇಟ್ ಸೈಬರ್ ಕ್ರೈಂ ವಿಭಾಗಕ್ಕೆ ನಿನ್ನೆ ದೂರು ನೀಡಿದ್ದು, ಕೋಮುಗಲಭೆ ಸೃಷ್ಟಿಸುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಜೈ ರಾಷ್ಟ್ರ ರಕ್ಷಣಾ ಪಡೆ ಎಂಬ ಹೆಸರಿನಡಿ ಸಕ್ರಿಯವಾಗಿರುವ ವಾಟ್ಸಪ್ ಗ್ರೂಪ್‍ನಲ್ಲಿ ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸೋಕೆ ಬಿಜೆಪಿ ನಮಗೆ ಬೆಂಬಲ ಕೊಟ್ಟಿದೆ. ಆದ್ದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿರಿ, ಎಲ್ಲಿ, ಏನು ಮಾಡಬೇಕೆಂಬುದನ್ನು ನಾವು ಈ ವಾಟ್ಸಪ್ ಗ್ರೂಪ್‍ನಲ್ಲಿ ಮಾಹಿತಿ ಕೊಡುತ್ತಿರುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ-2024 ಕ್ಕೆ ಮತ್ತೊಮ್ಮೆ ಮೋದಿ ಎಂಬ ಮೆಸೇಜ್ ಹಾಕಿದ್ದಾರೆ. ಸಂದೇಶ ರವಾನೆಯಾದ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿದಾಗ ಅದು ಪುನೀತ್ ಕೆರೆಹಳ್ಳಿ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ವ್ಯಕ್ತಿ ಈಗಾಗಲೇ ಕೋಮುವಾದಿ ಕುಖ್ಯಾತಿಗೆ ಒಳಗಾಗಿದ್ದಾನೆ.
4
+ ಕರ್ನಾಟಕದಾದ್ಯಂತ ಇಂತಹ ವಿಕೃತಗಳ ಹಾಗೂ ಕುಕೃತ್ಯಗಳ ರೂವಾರಿಯಾಗಿದ್ದಾನೆ. ಮತ್ತೊಮ್ಮೆ ರಾಜ್ಯದಲ್ಲಿ ಶಾಂತಿ ಕದಡುವ ಜನಾಂಗೀಯ ದ್ವೇಷವನ್ನು ಹುಟ್ಟುಹಾಕುವ ಕೆಲಸಕ್ಕೆ ಮುಂದಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪುನೀತ್ ಕೆರೆಹಳ್ಳಿ ಮತ್ತು ಆತನ ಸಂಗಡಿಗರು ಎಲ್ಲೆಲ್ಲಿ ಕೋಮುಗಲಭೆ ಸೃಷ್ಟಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಪಡೆದು ದುಷ್ಕøತ್ಯ ತಡೆಯಬೇಕು, ಕೋಮುಗಲಭೆ ಎಬ್ಬಿಸಲು ಸುಪಾರಿ ಕೊಟ್ಟಿರುವ ಬಿಜೆಪಿ ಹಾಗೂ ಇತರೆ ಸಂಘಟನೆಗಳ ಮುಖಂಡರ ವಿರುದ್ಧವೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿತ್ತು.
5
+ ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್
6
+ ಸೈಬರ್ ಕ್ರೈಂ ಪೊಲೀಸರು ದೂರು ಸ್ವೀಕರಿಸಿ ಕಾನೂನಾತ್ಮಕ ಪರಿಶೀಲನೆಗೆ ಮುಂದಾಗಿದ್ದಾರೆ. ದೂರಿನೊಂದಿಗೆ ವಾಟ್ಸಪ್ ಗ್ರೂಪ್‍ನಲ್ಲಿ ಸಂದೇಶ ಇರುವ ಸ್ಕ್ರೀನ್‍ಶಾಟ್ ಚಿತ್ರವನ್ನು ಕಾಂಗ್ರೆಸ್ ನಾಯಕರು ಲಗತ್ತಿಸಿದ್ದಾರೆ. ಕೆಪಿಸಿಸಿಯ ವಕ್ತಾರರೂ ಆಗಿರುವ ವಿಧಾನಪರಿಷತ್‍ನ ಮಾಜಿ ಸದಸ್ಯ ರಮೇಶ್‍ಬಾಬು ನೇತೃತ್ವದಲ್ಲಿ ಹಲಸೂರು ಗೇಟ್ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಮತ್ತೊಂದು ದೂರು ನೀಡಲಾಗಿದ್ದು, ಸನಾತನಿ ಹುಡುಗಿ ಹೆಸರಿನ ಸಾಮಾಜಿಕ ಜಾಲ���ಾಣ ಖಾತೆಯಲ್ಲಿ ಕೋಮು ಭಾವನೆ ಸೃಷ್ಟಿಸುವ ಪ್ರಚೋದನಾಕಾರಿ ಅಂಶಗಳಿವೆ ಎಂದು ಆಕ್ಷೇಪಿಸಲಾಗಿದೆ.
7
+ ಅನಾಮಧೇಯ ಹೆಣ್ಣು ಮಗಳೊಬ್ಬಳು ವಿಡಿಯೋ ಮಾಡಿ, ಸನಾತನ ಹುಡುಗಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಅದರಲ್ಲಿ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಅೀಧಿನದಲ್ಲಿರುವ ದೇವಾಲಯಗಳಿಗೆ ಭೇಟಿ ನೀಡಿದಾಗ ದೇಣಿಗೆ ನೀಡಬೇಡಿ, ಅದು ಸರ್ಕಾರಕ್ಕೆ ಹೋಗುತ್ತದೆ, ಅನ್ಯ ಧರ್ಮಗಳಿಗೆ ಬಳಕೆಯಾಗುತ್ತದೆ, ಕೇವಲ ಒಂದು ರೂಪಾಯಿ ಮಾತ್ರ ನೀಡಿ. ಖಾಸಗಿ ದೇವಾಲಯಗಳಿಗೆ ದೇಣಿಗೆ ಹೆಚ್ಚು ನೀಡಿ ಎಂದು ಸಂದೇಶ ನೀಡಲಾಗಿದೆ.
8
+ ಧರ್ಮದ ನಡುವೆ ಒಡಕು ಉಂಟು ಮಾಡುವ ಧಾರ್ಮಿಕ ದತ್ತಿ ಇಲಾಖೆಗಳಿಗೆ ಮಸಿ ಬಳಿಯುವ ಹುನ್ನಾರ ಮತ್ತು ಕುತಂತ್ರಗಳು ನಡೆದಿವೆ. ಸಮಾಜದ ಶಾಂತಿ ಕದಡುವ ರಾಜ್ಯವಿರೋ ಹಾಗೂ ಹಿಂದೂ ಧರ್ಮ ವಿರೋಧಿಗಳನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಪುಟ್ಟರಾಜು ಅವರ ಹೆಸರಿನಲ್ಲಿ ದೂರು ಸ್ವೀಕರಿಸಿರುವ ಪೊಲೀಸರು ಕಾನೂನಾತ್ಮಕ ಅಂಶಗಳನ್ನು ಪರಿಶೀಲಿಸುತ್ತಿದ್ದಾರೆ.
eesanje/url_46_268_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮುಸಲ್ಮಾನ ಗೂಂಡಾಗಳಿಂದ ನೈತಿಕ ಪೋಲೀಸ್‍ಗಿರಿ : ಈಶ್ವರಪ್ಪ ಆಕ್ರೋಶ
2
+ ಬೆಳಗಾವಿ,ಜ.7- ಬೆಳಗಾವಿಯಲ್ಲಿ ನಡೆದಿರುವ ನೈತಿಕ ಪೊಲೀಸ್‍ಗಿರಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮುಸ್ಲಿಂ ಗೂಂಡಾಗಳನ್ನುಮಟ್ಟ ಹಾಕಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿನ್ ಲಂಬಾಣಿ ಎಂಬ ಯುವಕನ ಮೇಲೆ ಹಲ್ಲೆಯಾಗಿದೆ. ಅವರ ಸಂಬಂಧಿಕರು ಮುಸಲ್ಮಾನರಾಗಿ ಮತಾಂತರ ಆಗಿದ್ದಾರೆ. ಆತನ ಜೊತೆ ಕುಳಿತಿದ್ದ ಹೆಣ್ಣುಮಗಳು ಸಚಿನ್‍ಗೆ ತಂಗಿಯಾಗಬೇಕು. ಇಬ್ಬರೂ ಯುವನಿಗೆ ಅರ್ಜಿ ಸಲ್ಲಿಸಲು ಆಗಮಿಸಿದ್ದರು. ಕಚೇರಿಯಲ್ಲಿ ಒಂದು ಗಂಟೆಯ ಬಳಿಕ ಬರುವಂತೆ ಹೇಳಿದ್ದರಿಂದಾಗಿ ಹೊರಗಡೆ ಕುಳಿತಿದ್ದರು. ಆ ಸಂದರ್ಭದಲ್ಲಿ ಕೆಲವು ಮುಸಲ್ಮಾನ ಗೂಂಡಾಗಳು ಬಂದು, ನೈತಿಕ ಪೊಲೀಸ್‍ಗಿರಿ ನಡೆಸಿದ್ದಾರೆ ಎಂದು ಹೇಳಿದರು.
3
+ ಮುಸ್ಲಿಂ ಹುಡುಗಿಯ ಜೊತೆ ಕುಳಿತಿದ್ದೀಯ ಎಂದು ಹೇಳಿ ಸಚಿನ್ ಲಂಬಾಣಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಆತ ಕಷ್ಟಪಟ್ಟು ತಪ್ಪಿಸಿಕೊಂಡು ಬಂದಿದ್ದಾನೆ. ಹಲ್ಲೆಯ ವಿಡಿಯೋಗಳನ್ನು ನಾನು ನೋಡಿದ್ದೇನೆ. ಅವುಗಳನ್ನು ಮಾದ್ಯಮದಲ್ಲಿ ಪ್ರಸಾರ ಮಾಡುವ ಮೂಲಕ ಮುಸ್ಲಿಂ ಗೂಂಡಾಗಳ ದೌರ್ಜನ್ಯದ ಕುರಿತು ಜನಜಾಗೃತಿ ಮೂಡಿಸಬೇಕು. ಯುವತಿಯ ಮೇಲೂ ದೌರ್ಜನ್ಯವಾಗಿದೆ ಎಂಬ ಆರೋಪಗಳಿವೆ. ಆದರೆ ನನಗೆ ಖಚಿತವಾದ ಮಾಹಿತಿಗಳಿಲ್ಲ. ಆಕೆ ಮುಸಲ್ಮಾನರಾಗಿದ್ದರೂ ಕೂಡ ನ್ಯಾಯ ದೊರಕಿಸಬೇಕು ಎಂದು ಹೇಳಿದರು.
4
+ ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್
5
+ ಬೆಳಗಾವಿಯಲ್ಲಿ ಪೊಲೀಸ್ ವ್ಯವಸ್ಥೆ ವೈಫಲ್ಯ ಕಂಡಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ್ದೂ ಸೇರಿದಂತೆ ಇತ್ತೀಚೆಗೆ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ದೂರಿದರು.
6
+ ಕಾಂಗ್ರೆಸಿಗರು ಹಿಂದೂ, ಮುಸ್ಲಿಂ ನಡುವೆ ಗಲಾಟೆ ಸೃಷ್ಟಿಸಿ, ಅದರಿಂದಾಗಿಯೇ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಸಂಚು ರೂಪಿಸಿದ್ದಾರೆ. ಹೀಗಾಗಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯ ಕರಸೇವಕ ಪ್ರಕರಣದಲ್ಲಿ 14 ಕೇಸುಗಳಿವೆ ಎಂದು ಸುಳ್ಳು ಹೇಳಿದರು. ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಯಿತು. ಇದಕ್ಕೆ ಜನರೂ ಬೆಂಬಲ ನೀಡಿದರು. ಕೋರ್ಟಿಗೂ ಮನವರಿಕೆಯಾಗಿ ಬಂಧಿತನಿಗೆ ಜಾಮೀನು ಸಿಕ್ಕಿದೆ ಎಂದು ಹೇಳಿದರು.
7
+ ಮುಖ್ಯಮಂತ್ರಿಯವರು ಹುಬ್ಬಳ್ಳಿಯಷ್ಟೇ ಅಲ್ಲ, ಹಿಜಾಬ್ ವಿಷಯದಲ್ಲೂ ನ್ಯಾಯಾಲಯವನ್ನು ಮೀರಿ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಅಲ್ಪಸಂಖ್ಯಾತರನ್ನು ಓಲೈಸುವುದೇ ದೊಡ್ಡ ಕೆಲಸವಾಗಿದೆ ಎಂದರು. ನೈತಿಕ ಪೊಲೀಸ್‍ಗಿರಿ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಮೃದು ಧೋರಣೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಎಲ್ಲರೂ ಬ���ನಗೌಡ ಪಾಟೀಲ್ ಯತ್ನಾಳ್ ಅಥವಾ ಈಶ್ವರಪ್ಪ ಆಗಲು ಸಾಧ್ಯವಿಲ್ಲ ಎಂದು ಹೇಳಿದರು.
8
+ ರಾಜ್ಯದಲ್ಲಿ ಪೊಲೀಸ್ ಇಲಾಖೆ ಸತ್ತು ಹೋಗಿದೆಯೇ ಎಂಬ ಅನುಮಾನಗಳು ಬರುತ್ತಿವೆ. ರಾಜ್ಯಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಇಂತಹ ಕೃತ್ಯಗಳು ನಡೆಯದಂತೆ ಪಾಠ ಕಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು. ಬಿಜೆಪಿಯವರ ವಿರುದ್ಧ ಎಷ್ಟೇ ಪ್ರಕರಣಗಳನ್ನು ದಾಖಲಿಸಿದರೂ ನಾವು ಹೆದರುವುದಿಲ್ಲ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಲಕ್ಷಾಂತರ ಪ್ರಕರಣವನ್ನು ದಾಖಲಿಸಲಾಗಿತ್ತು. ಈಗ ಬೇಕಿದ್ದರೆ ಅವುಗಳಿಗೂ ಮರುಜೀವ ನೀಡಲಿ. ನಮಗೆ ಯಾವುದೇ ಅಂಜಿಕೆಯಿಲ್ಲ ಎಂದು ಹೇಳಿದರು.
9
+ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿಲ್ಲ : ಡಿಕೆಶಿ
10
+ ತಮ್ಮ ಪುತ್ರನಿಗೆ ಹಾವೇರಿ ಲೋಕಸಭೆ ಚುನಾವಣೆಯಿಂದ ಸ್ರ್ಪಧಿಸಲು ಅವಕಾಶ ನೀಡಿದರೆ ಗೆಲುವು ಸಾಧ್ಯವಾಗುತ್ತದೆ. ಯಾರಿಗೇ ಕೊಟ್ಟರೂ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ. ಅಲ್ಲಿನ ಹಾಲಿ ಸಂಸದ ಶಿವಕುಮಾರ್ ಉದಾಸಿ ಜೊತೆ ತಾವು ಚರ್ಚೆ ಮಾಡಿದ್ದು, ಅವರು ಮತ್ತೆ ಚುನಾವಣೆಯಲ್ಲಿ ಸ್ರ್ಪಧಿಸುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷದ ಹಿರಿಯರ ಜೊತೆ ಸಮಾಲೋಚನೆ ನಡೆಸಿದಾಗ, ನೀವು ಕೆಲಸ ಮಾಡಿ ಎಂದು ಸಲಹೆ ನೀಡಿದರು. ಅದರಂತೆ ನಾವು ಓಡಾಡುತ್ತಿದ್ದೇವೆ ಎಂದರು.
11
+ ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಸಂಸದರಾಗಿದ್ದಾರೆ. ಅವರಿಗೆ ತೊಂದರೆ ಕೊಟ್ಟು ನಾವು ಟಿಕೆಟ್ ಕೇಳುವುದಿಲ್ಲ. ಹೀಗಾಗಿ ಖಾಲಿ ಇರುವ ಹಾವೇರಿ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದರು.
eesanje/url_46_268_5.txt ADDED
@@ -0,0 +1,5 @@
 
 
 
 
 
 
1
+ ಮೋದಿಯವರ ದಿಟ್ಟ ನಾಯಕತ್ವದಲ್ಲಿ ಭಾರತ ರಾಮರಾಜ್ಯವಾಗುತ್ತದೆ : ಬಿಎಸ್‌ವೈ
2
+ ಬೆಂಗಳೂರು,ಜ.7- ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಾಯಕತ್ವದಲ್ಲಿ ಭಾರತ ರಾಮರಾಜ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
3
+ ಡಾಲರ್ಸ್ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ನಿವೃತ್ತ ನ್ಯಾಯಮೂರ್ತಿ ಪತ್ರೆ ಬಸವನಗೌಡ ಅವರ ಮನೆಯೂ ಸೇರಿದಂತೆ ಹಲವು ಮನೆಗಳಿಗೆ ಭೇಟಿ ನೀಡಿ, ಮಂತ್ರಾಕ್ಷತೆಯನ್ನು ವಿತರಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ಹಿಂದೂಗಳು ಶತಮಾನಗಳಿಂದ ಕಂಡಿರುವ ಕನಸು ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆಯನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಕರಸೇವಕರು ಮಾಡುತ್ತಿದ್ದಾರೆ ಎಂದು ಹೇಳಿದರು.
4
+ ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
5
+ ಕರಸೇವಕನಾಗಿ ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದು ನನ್ನ ಬಾಳಿನ ಸುದಿನ. ಈಗ ಮತ್ತೊಮ್ಮೆ ಕರಸೇವಕನಾಗಿ ರಾಮನ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದರು. ರಾಮಮಂದಿರದ ಜೊತೆಗೆ ದೇಶ ರಾಮರಾಜ್ಯವಾಗುತ್ತಿದೆ ಎಂದು ಹೇಳುವುದಕ್ಕೆ ನನಗೆ ಯಾವುದೇ ಮುಜುಗರ ಇಲ್ಲ. ಟೀಕೆ, ಟಿಪ್ಪಣಿಗಳಿಗೆ ಉತ್ತರ ನೀಡುವುದಿಲ್ಲ. ನಾವು ನಮ್ಮ ಪಾಲಿನ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದ್ದೇವೆ ಎಂದು ಹೇಳಿದರು.
eesanje/url_46_268_6.txt ADDED
@@ -0,0 +1,6 @@
 
 
 
 
 
 
 
1
+ ಮಂತ್ರಿ ಮಾಡ್ತೀನಿ ಎಂದು ಸಿಎಂ ಭರವಸೆ ನೀಡಿದ್ದಾರೆ : ಶಾಸಕ ಬಸವರಾಜ ರಾಯರೆಡ್ಡಿ
2
+ ಕೊಪ್ಪಳ,ಜ.7-ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗುವುದಾದರೆ ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ, ನಾನು ಅದೇ ವಿಶ್ವಾಸದಲ್ಲಿದ್ದೇನೆ ಎಂದು ಹಿರಿಯ ಶಾಸಕ ಬಸವರಾಜರಾಯರೆಡ್ಡಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನೀಡಿದ ತಮ್ಮ ಹೇಳಿಕೆಗೆ ಬದ್ಧ ಎಂದು ತಿಳಿಸಿದ್ದಾರೆ. ಸರ್ಕಾರ ರಚನೆಯಾಗುವ ವೇಳೆ ನನ್ನನ್ನು ಮಂತ್ರಿ ಮಾಡುವುದಾಗಿ ಸಿದ್ದರಾಮಯ್ಯ ಸಂದೇಶ ಕಳುಹಿಸಿದ್ದರು. ಅರಣ್ಯ, ಪರಿಸರ, ಜೀವಿಶಾಸ್ತ್ರ ಮತ್ತು ಯೋಜನಾ ಇಲಾಖೆಗಳ ಖಾತೆ ನೀಡುವುದಾಗಿಯೂ ಹೇಳಿದ್ದರು. ಆದರೆ ರಾಜಕೀಯ ಕಾರಣಕ್ಕಾಗಿ ಕೊನೆ ಕ್ಷಣದ ಬದಲಾವಣೆಗಾಗಿ ಅವಕಾಶ ತಪ್ಪಿ ಹೋಗಿದೆ ಎಂದರು.
3
+ ಸಚಿವ ಸ್ಥಾನ ಸೇರಿದಂತೆ ರಾಜಕೀಯ ಹುದ್ದೆಗಳು ಸರ್ಕಾರ ನೇಮಕಾತಿಗಳಂತಲ್ಲ. ಇಲ್ಲಿ ನಾನಾ ರೀತಿಯ ಹೊಂದಾಣಿಕೆಗಳಿರುತ್ತವೆ. ಸಚಿವರಾಗಲು ಅನುಭವ, ಹಿರಿತನ, ಕಿರಿತನ ಎಂಬ ಮಾನದಂಡಗಳು ಲೆಕ್ಕಕ್ಕಿರುವುದಿಲ್ಲ. 25 ವರ್ಷ ದಾಟಿದವರು, ಒಳ್ಳೆಯ ನಡತೆ ಹೊಂದಿದವರು ಪ್ರಧಾನಿ ಬೇಕಾದರೂ ಆಗಬಹುದು ಎಂದು ಹೇಳಿದರು.
4
+ ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
5
+ ರಾಜಕೀಯದಲ್ಲಿ 5 ನಿಮಿಷಗಳಲ್ಲೇ ಏನು ಬೇಕಾದರೂ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಹಿಂದೆ ನನಗೆ ಸಚಿವ ಸ್ಥಾನ ತಪ್ಪಿ ಹೋಗಿತ್ತು. ಲೋಕಸಭೆ ಚುನಾವಣೆಯಾದ ಬಳಿಕ ಅವಕಾಶ ಸಿಗುವ ನಿರೀಕ್ಷೆಗಳಿವೆ. ಮುಖ್ಯಮಂತ್ರಿಯವರೇ ನಿನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಅದನ್ನು ನಂಬಿಕೊಂಡಿದ್ದೇನೆ. ಆದರೆ ಅವಕಾಶ ಸಿಕ್ಕರೂ ಸಿಗಬಹುದು, ಸಿಗದೆಯೂ ಇರಬಹುದು. ಇದೇನು ಬಾಂಡ್ ಮೇಲೆ ಬರೆದುಕೊಡುವ ವಿಚಾರವಲ್ಲ ಎಂದರು.
6
+ ಲೋಕಸಭೆ ಚುನಾವಣೆಯ ಬಳಿಕ ಎಂದರೆ ಸಾಮಾನ್ಯವಾಗಿ ಜೂನ್-ಜುಲೈನಲ್ಲಿ ಸಂಪುಟ ವಿಸ್ತರಣೆಯಾಗಬಹುದು ಎಂಬುದು ನಮ್ಮ ಲೆಕ್ಕಾಚಾರ. ಆ ಹಿನ್ನೆಲೆಯಲ್ಲಿ ತಾವು ನಿನ್ನೆ ಹೇಳಿಕೆ ನೀಡಿದ್ದಾಗಿ ಸಮರ್ಥಿಸಿಕೊಂಡರು.
eesanje/url_46_268_7.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜ್ಯದಲ್ಲಿ ನದಿಗಳ ಜೋಡಣೆ ಅಧ್ಯಯನಕ್ಕೆ ಕೇಂದ್ರ ನಿಯೋಗ
2
+ ಬೆಂಗಳೂರು,ಜ.7- ದೇಶದಲ್ಲಿ ನದಿ ಜೋಡಣೆ ವಿಷಯ ಕುರಿತು ಅಧ್ಯಯನ ನಡೆ ಸುತ್ತಿರುವ ಕೇಂದ್ರ ಸಂಸದರ ನಿಯೋಗ ಇದೇ 17 ಮತ್ತು 18 ರಂದು ರಾಜ್ಯದಲ್ಲಿ ಪ್ರವಾಸ ಕೈಗೊಂಡು ನಮ್ಮ ನದಿಗಳನ್ನು ವೀಕ್ಷಿಸಲಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
3
+ ನದಿ ಜೋಡಣೆ ದೇಶಾದ್ಯಂತ ದೊಡ್ಡ ವಿಷಯವಾಗಿ ಚರ್ಚೆಯಾಗುತ್ತಿದೆ. ಇದರ ಬಗ್ಗೆ ಸದ್ಯಕ್ಕೆ ವಿಸ್ತೃತವಾದ ಸಮಾಲೋಚನೆಗಳು ನಡೆಯುತ್ತಿವೆ. 31 ಜನ ಸಂಸದರ ನಿಯೋಗ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ನೀರಾವರಿ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಲಿದೆ ಎಂದು ಹೇಳಿದರು. ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ, ಕೃಷ್ಣ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗಳನ್ನು ಸಂರಕ್ಷಿಸಲು ತಕ್ಷಣದಿಂದಲೇ 2.75 ಟಿಎಂಸಿ ನೀರನ್ನು ಕಾಲುವೆಗಳಿಗೆ ಹರಿಸಲಾಗುತ್ತಿದೆ ಎಂದು ತಿಳಿಸಿದರು.
4
+ ಕೃಷ್ಣ ಮೇಲ್ದಂಡೆ ಯೋಜನೆ ವ್ಯಾಪ್ತಿಯ ರಾಯಚೂರು, ಬಾಗಲಕೋಟೆ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಚಿವರು, ಜಿಲ್ಲಾಧಿಕಾರಿಗಳು, ನೀರಾವರಿ ಅಧಿಕಾರಿಗಳು ಸೇರಿದಂತೆ ಎಲ್ಲರೊಂದಿಗೆ ನಿನ್ನೆ ರಾತ್ರಿ ವಿಡಿಯೋ ಕಾನರೆನ್ಸ್ ಸಭೆ ನಡೆಸಲಾಗಿದೆ. ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗೆ ನೀರು ಒದಗಿಸುವಂತೆ ಒತ್ತಾಯಿಸಿ ರೈತರು ಕಚೇರಿಯ ಮುಂದೆ ಗುಂಡಿ ತೋಡಿಕೊಂಡು ಅದರಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರವನ್ನು ಈ ರೀತಿಯ ಬ್ಲಾಕ್‍ಮೇಲ್ ಮಾಡುವುದು ಒಳ್ಳೆಯದಲ್ಲ ಎಂದು ನಾನು ಅವರಿಗೆ ತಿಳಿಸಿದ್ದೇನೆ ಎಂದರು.
5
+ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳೆರಡರಿಂದಲೂ ಒಟ್ಟು 154 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯವಿದೆ. ಆದರೆ ಪ್ರಸ್ತುತ 2 ಜಲಾಶಯಗಳಿಂದಲೂ 47.01 ಟಿಎಂಸಿ ಮಾತ್ರ ಲಭ್ಯವಿದೆ. ಇದರಲ್ಲಿ ಕುಡಿಯುವ ನೀರು ಹಾಗೂ ಇತರ ಅಗತ್ಯಗಳಿಗಾಗಿ ಮುಂದಿನ ಜೂನ್ 30 ರವರೆಗೂ 38.788 ಟಿಂಎಂಸಿ ನೀರಿನ ಅಗತ್ಯವಿದೆ. ಬಾಷ್ಪೀಕರಣ ಹಿನ್ನೀರಿನ ಬಳಕೆಗೆ 3.90 ಟಿಎಂಸಿ ನೀರನ್ನು ರಕ್ಷಿಸಬೇಕು. ಆಲಮಟ್ಟಿಯಿಂದ ನಾರಾಯಣಪುರ ಜಲಾಶಯಕ್ಕೆ ನೀರು ಹರಿಯುವಾಗ 1.50 ಟಿಎಂಸಿ ಸರಬರಾಜು ನಷ್ಟವಾಗಲಿದೆ. ಇದನ್ನೆಲ್ಲಾ ಪರಿಗಣಿಸಿದರೆ ಒಟ್ಟು 44.188 ಟಿಎಂಸಿಯನ್ನು ಕಾಯ್ದಿರಿಸಬೇಕು. ಬಳಕೆಗೆ ಲಭ್ಯವಿರುವುದು 2.8 ಟಿಎಂಸಿ ಮಾತ್ರ. ಇದರಲ್ಲಿ 2.75 ಟಿಎಂಸಿಯನ್ನು ತಕ್ಷಣದಿಂದಲೇ ಹರಿಸಲಾಗುವುದು ಎಂದು ತಿಳಿಸಿದರು.
6
+ ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
7
+ ಬಿಡುಗಡೆ ಮಾಡುವ ನೀರನ್ನು ಅಚ್ಚುಕಟ್ಟು ಭಾಗದ ಕೊನೆಯವರೆಗೂ ತಲುಪಿಸುವ ಜವಾಬ್ದಾರಿಯನ್ನು ಖುದ್ದು ರೈತ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಪೊಲೀಸ್ ಇಲಾಖೆಯವರು ನಿರ್ವಹಿಸ��ೇಕಿದೆ ಎಂದು ಹೇಳಿದರು.
8
+ ರಾಜ್ಯದಲ್ಲಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಭಾಗದಲ್ಲಿ 92 ತಾಲೂಕುಗಳು ಬರಪೀಡಿತವಾಗಿದೆ. ಸದ್ಯಕ್ಕೆ ಮಳೆ ಬರುವ ನಿರೀಕ್ಷೆ ಕಡಿಮೆ ಇದೆ. ಹೀಗಾಗಿ ಜಲಾಶಯದಲ್ಲಿನ ನೀರನ್ನು ಕಾಯ್ದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದರು.
eesanje/url_46_268_8.txt ADDED
@@ -0,0 +1,6 @@
 
 
 
 
 
 
 
1
+ ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್
2
+ ಬೆಂಗಳೂರು, ಜ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮಲ್ಲಿ ನಿಜಕ್ಕೂ ಮಾನವೀಯತೆ ಇದ್ದರೆ, ರಾಜ್ಯದ ಕೃಷಿ ಕಾರ್ಮಿಕರು, ದಲಿತರು, ಪರಿಶಿಷ್ಟ ಪಂಗಡದವರು, ಹಿಂದುಳಿದವರ ಮೇಲೆ ಕಾಳಜಿ ಇದ್ದರೆ ಮೊದಲು ರಾಜ್ಯದ ಜನತೆ ಗುಳೆ ಹೋಗುವುದನ್ನು ತಪ್ಪಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.
3
+ ಈ ಕುರಿತು ತಮ್ಮ ಆಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುವುದೇ ನಿಮ್ಮ ಸಾಧನೆಯಾಗಿಬಿಟ್ಟಿದೆ. ರೈತರ ನೆರವಿಗೆ ಬರಲು ನಿಮ್ಮ ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಗ್ರಹಿಸಿದ್ದಾರೆ. ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ ಎಂದಿರುವ ಅವರು, ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದ್ದಾರೆ.
4
+ ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ
5
+ ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಟೀಕಿಸಿದ್ದಾರೆ.
6
+ ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿದ್ದ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿದ್ದ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
eesanje/url_46_268_9.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿದ್ದೆ : ವಿಜಯೇಂದ್ರ
2
+ ಬೆಂಗಳೂರು,ಜ.7-ಕಾಂಗ್ರೆಸ್ ನಾಯಕರು ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ವರ್ತಿಸುತ್ತಿದ್ದಾರೆ. ಧರ್ಮ-ಧರ್ಮಗಳ ಹಾಗೂ ಸಮಾಜಗಳ ನಡುವೆ ವಿಷಬೀಜ ಬಿತ್ತುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
3
+ ಅಯೋಧ್ಯೆ ರಾಮಮಂದಿರದಲ್ಲಿ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಯುಕ್ತ ಮಂತ್ರಾಕ್ಷತೆ ವಿತರಿಸಿ ಜನಜಾಗೃತಿ ಮೂಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ದೇಶದಲ್ಲಿ ಎಲ್ಲರೂ ಒಂದು ಎಂಬ ಭಾವನೆ ಮೂಡುತ್ತಿದೆ. ಇಂತಹ ಶುಭ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಠೀಕರಣದ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಯತ್ನ ನಡೆಸುತ್ತಿದೆ ಎಂದು ಕಿಡಿಕಾರಿದರು.
4
+ ಕಾಂಗ್ರೆಸ್‍ಗೆ ತಾವು ಅಲ್ಪಸಂಖ್ಯಾತರ ಮತಗಳಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಭಾವನೆ ಇದೆ. ಇದಕ್ಕಾಗಿ ರೈತರೂ ಸೇರಿದಂತೆ ಎಲ್ಲಾ ವರ್ಗಗಳನ್ನೂ ಕಡೆಗಣಿಸುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡುತ್ತೇವೆ ಎನ್ನುವುದರೊಂದಿಗೆ ಡಿಜೆ ಹಳ್ಳಿ/ಕೆಜೆ ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ದೇಶದ್ರೋಹಿಗಳನ್ನು ಅಮಾಯಕರು ಎಂದು ಬಿಂಬಿಸುವ ಪ್ರಯತ್ನಗಳಾಗುತ್ತಿವೆ ಎಂದು ಅವರು ದೂರಿದರು.
5
+ ಬಾಂಗ್ಲಾ ಸಾರ್ವತ್ರಿಕ ಚುನಾವಣೆ, ಬಿಗಿ ಭದ್ರತೆ ನಡುವೆ ಮತದಾನ
6
+ ಒಂದು ವೇಳೆ ಕೆಜೆ ಹಳ್ಳಿ/ಡಿಜೆ ಹಳ್ಳಿ ಪ್ರಕರಣದಲ್ಲಿನ ಆರೋಪಿಗಳನ್ನು ಬಿಡುಗಡೆ ಮಾಡಿದರೆ ಅದು ಇನ್ನಿತರ ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತದೆ. ಪೊಲೀಸ್ ಠಾಣೆಗಳಿಗೆ ಬೆಂಕಿ ಇಟ್ಟವರನ್ನು ಬಿಡುಗಡೆ ಮಾಡಿದ್ದಾರೆ ಎಂಬ ಧೋರಣೆಯಿಂದ ಇತರರು ಅದೇ ರೀತಿಯ ಕೃತ್ಯಗಳಲ್ಲಿ ತೊಡಗುವ ಆತಂಕವಿದೆ ಎಂದು ಹೇಳಿದರು.
7
+ ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಅವರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರು ತ್ರಿಬ್ಬಲ್ ತಲಾಕ್ ನಿಷೇಧ ಜಾರಿಗೆ ತಂದಿದ್ದಾರೆ. ಆದರೆ ದುಷ್ಕøತ್ಯಗಳಲ್ಲಿ ಭಾಗಿಯಾದವರನ್ನು ರಕ್ಷಿಸುವುದು ಅಕ್ಷಮ್ಯ ಅಪರಾಧ ಎಂದರು.
8
+ ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ
9
+ ಕಾಂಗ್ರೆಸ್‍ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಗ್ಗು ಬಡಿಯಬೇಕು, ಸೊಕ್ಕು ಮುರಿಯಬೇಕು ಎಂದು ಅವರದೇ ಪಕ್ಷದ ಮಹಾನ್ ನಾಯಕರು ಯೋಜನೆ ರೂಪಿಸಿದ್ದಾರೆ. ಅದಕ್ಕಾಗಿ 3 ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಕುರಿತು ಚರ್ಚೆಗಳಾಗುತ್ತಿವೆ. ಅವರಿಗೆ ಯಶಸ್ಸು ದೊರೆಯಲಿ ಎಂದು ಹಾರೈಸಿದರು.
eesanje/url_46_269_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಜ.7- ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ ಸೇರಿದಂತೆ ಚಿತ್ರಕಲಾ ಪರಿಷತ್ತಿನ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಕುಮಾರಕೃಪದಲ್ಲಿರುವ ಚಿತ್ರಕಲಾ ಪರಿಷತ್ತಿನಲ್ಲಿ 21 ನೇ ಚಿತ್ರಸಂತೆಯನ್ನು ಕ್ಯಾನ್‍ವಾಸ್ ಮೇಲೆ ಸಹಿ ಹಾಕುವ ಮೂಲಕ ಉದ್ಘಾಟಿಸಿದ ಮುಖ್ಯಮಂತ್ರಿಯವರು ಮಾತನಾಡಿದರು.
3
+ ಈ ಬಾರಿಯ ಚಿತ್ರಸಂತೆಯನ್ನು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಅಭೂತಪೂರ್ವ ಸಾಧನೆಗಳನ್ನು ಮಾಡಿದ ವಿಜ್ಞಾನಿಗಳಿಗೆ ಸಮರ್ಪಿಸಿರುವುದು ಸ್ವಾಗತಾರ್ಹ ಎಂದರು. ಈ ಮೊದಲು 2013 ರಿಂದ 2018 ರವರೆಗೆ ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ವರ್ಷವೂ ಚಿತ್ರಸಂತೆಯನ್ನು ಉದ್ಘಾಟನೆ ಮಾಡಿದ್ದೆ. ಇದು ನನಗೆ ಮುಖ್ಯಮಂತ್ರಿಯಾಗಿ 6ನೇ ಕಾರ್ಯಕ್ರಮ ಎಂದರು.
4
+ ಚಿತ್ರಕಲಾ ಪರಿಷತ್ತಿನ ಬೆಳವಣಿಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿಯವರು, ವಿವಿಧ ರಾಜ್ಯಗಳಿಂದ ಆಗಮಿಸಿರುವ ಕಲಾವಿದರಿಗೆ ಸ್ವಾಗತ ಕೋರಿದರು. ಈ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಚಿತ್ರಕಲಾ ಪರಿಷತ್‍ಗೆ 1 ಕೋಟಿ ರೂ.ಗಳ ಅನುದಾನ ನೀಡಿದ್ದೆ, ಈ ಬಾರಿ 10 ಲಕ್ಷ ರೂ.ಗಳನ್ನು ಕೊಡುವುದಾಗಿ ಭರವಸೆ ನೀಡಿದ್ದೆ. ಅದನ್ನು 50 ಲಕ್ಷ ರೂ.ಗಳಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಇದೇ ವೇಳೆ ಮತ್ತಷ್ಟು ಹೆಚ್ಚು ಅನುದಾನ ನೀಡುವಂತೆ ಚಿತ್ರಕಲಾ ಪರಿಷತ್‍ನ ಪ್ರಭಾಕರ್ ಮನವಿ ಮಾಡಿದಾಗ, ‘ಏಯ್ ಸುಮ್ನಿರಪ್ಪ, ಎಲ್ಲವನ್ನೂ ಒಳಗೊಂಡು 50 ಲಕ್ಷ ರೂ. ಕೊಡುತ್ತೇನೆ, ಮುಂದಿನ ವರ್ಷ ಹೆಚ್ಚು ಮಾಡುತ್ತೇನೆ ಎಂದು ಭರವಸೆ ನೀಡಿದರು.
5
+ ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ
6
+ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಒಂದೇ ರಸ್ತೆಯಲ್ಲಿ ಸಾವಿರಾರು ಕಲಾವಿದರು ಭಾಗವಹಿಸುವಂತಹ ಕಾರ್ಯಕ್ರಮ ವಿಶ್ವದಲ್ಲಿ ಎಲ್ಲಿಯೂ ನಡೆಯುವುದಿಲ್ಲ. ಅದು ಬೆಂಗಳೂರಿನಲ್ಲಿ 2003 ರಿಂದಲೂ ನಿರಂತರವಾಗಿ ನಡೆದುಕೊಂಡು ಬಂದಿದೆ. ಮುಖ್ಯಮಂತ್ರಿಗಳ ನಿವಾಸವಿರುವ ಕುಮಾರಕೃಪ ರಸ್ತೆಯಲ್ಲಿ ಒಂದು ದಿನ ಸಂಚಾರವನ್ನು ಸ್ಥಗಿತಗೊಳಿಸಿ ಚಿತ್ರಸಂತೆ ನಡೆಸುತ್ತಿರುವುದು ಹೆಮ್ಮೆಯ ವಿಚಾರ. ಕುಮಾರಕೃಪ, ಗಾಂಧಿ ಭವನ, ಸೇವಾದಳ ರಸ್ತೆಗಳಷ್ಟೇ ಅಲ್ಲದೆ ಈ ಬಾರಿ ಶಿವಾನಂದ ವೃತ್ತವನ್ನು ಸಂಪರ್ಕಿಸುವ ಮೇಲ್ಸೇತುವೆಯ ಕೆಳಭಾಗದಲ್ಲೂ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದರು.
7
+ 22 ರಾಜ್ಯಗಳಿಂದ ಸುಮಾರು 2,900 ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಲು ಆಸಕ್ತಿ ವಹಿಸಿದ್ದರು. ಆದರೆ 1,684 ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಅರ್ಜಿ ಸಲ್ಲಿಸಿದ 280 ವಿಶೇಷ ಚೇತನರು ಹಾಗೂ ಹಿರಿಯ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು. ��ಚಿವರಾದ ಎಚ್.ಕೆ.ಪಾಟೀಲ್, ಡಾ.ಎಂ.ಸಿ.ಸುಧಾಕರ್, ಶಾಸಕರಾದ ರಿಜ್ವಾನ್ ಅರ್ಷದ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಅಜಯ್ ಸಿಂಗ್, ಚಿತ್ರಕಲಾ ಪರಿಷತ್‍ನ ಉಪಾಧ್ಯಕ್ಷ ಪ್ರಭಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
8
+ ಡಿಜೆ ಹಳ್ಳಿ-ಕೆಜೆ ಹಳ್ಳಿ ಪ್ರಕರಣದ ಕೈದಿಗಳ ಬಿಡುಗಡೆಗೆ ಡಿಸಿಎಂ ಬಳಿ ಮನವಿ
9
+ ತಮಿಳುನಾಡಿನ ಕಲಾವಿದ ಮೇಯಪ್ಪನ್ ನೇತೃತ್ವದಲ್ಲಿ ಅದ್ಭುತವಾದ ಚಿತ್ರಕಲೆಯನ್ನು ಮುಖ್ಯಮಂತ್ರಿಯವರ ಖಾಸಗಿ ಸಂಗ್ರಹಕ್ಕೆ ಕೊಡುಗೆಯಾಗಿ ನೀಡಲಾಯಿತು.
eesanje/url_46_269_10.txt ADDED
@@ -0,0 +1,6 @@
 
 
 
 
 
 
 
1
+ ಸೋಮಣ್ಣರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ : ಸಿ.ಟಿ.ರವಿ
2
+ ಬೆಂಗಳೂರು,ಜ.6- ಯಾವುದೇ ಕಾರಣಕ್ಕೂ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಪಕ್ಷದಿಂದ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರು ಪಕ್ಷದ ಹಿರಿಯರು ಹಾಗೂ ಪ್ರಭಾವಿ ನಾಯಕರೂ ಹೌದು. ಅವರಿಗೆ ಕಳೆದ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು. ಅದೊಂದೇ ಕಾರಣಕ್ಕಾಗಿ ಅವರನ್ನು ಬಿಟ್ಟುಕೊಡುವುದಿಲ್ಲ ಎಂದರು.
3
+ ಸೋಮಣ್ಣನವರ ಶಕ್ತಿ ಮತ್ತು ಸಾಮಥ್ರ್ಯವನ್ನು ನಾವು ಬಳಸಿಕೊಳ್ಳುತ್ತೇವೆ. ಅವರ ಹಿರಿತನಕ್ಕೆ ತಕ್ಕಂತೆ ಜವಾಬ್ದಾರಿಯನ್ನು ಪಕ್ಷ ನೀಡಲಿದೆ. ಎಂಥದ್ದೇ ಸಂದರ್ಭದಲ್ಲೂ ಅವರಿಗೆ ಮುಜುಗರವಾಗುವ ರೀತಿ ನಡೆದುಕೊಳ್ಳುವುದಿಲ್ಲ. ಅವರಿಗೆ ಖಂಡಿತವಾಗಿಯೂ ಸೂಕ್ತವಾದ ಸ್ಥಾನಮಾನ ಸಿಗಲಿದೆ. ರಾಜಕಾರಣದಲ್ಲಿ ಕೆಲವು ಸಂದರ್ಭದಲ್ಲಿ ಏರಿಳಿತಗಳು ಉಂಟಾಗುವುದು ಸಹಜ ಎಂದರು.
4
+ ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ
5
+ ಅವರಿಗೆ ಯಾವ ಸ್ಥಾನಮಾನ ಕೊಡುತ್ತಾರೆ ಎಂಬುದರ ಬಗ್ಗೆ ನಮಗೆ ಖಂಡಿತವಾಗಿಯೂ ಮಾಹಿತಿ ಇಲ್ಲ. ಅವರ ಸಾಮಥ್ರ್ಯಕ್ಕೆ ತಕ್ಕಂತೆ ಸ್ಥಾನಮಾನ ಸಿಗಲಿದೆ. ಸೋಮಣ್ಣನವರು ಹಿರಿಯರು. ಎಂಥದ್ದೇ ಸಂದರ್ಭದಲ್ಲೂ ಅವರು ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವನ್ನು ಸಿ.ಟಿ.ರವಿ ವ್ಯಕ್ತಪಡಿಸಿದರು.ಅವರಿಗೆ ಜವಾಬ್ದಾರಿಯುತವಾದ ಸ್ಥಾನ ಕೊಡುವ ಕೆಲಸವಾಗಿದೆ. ಸೋಮಣ್ಣನವರನ್ನು ನಾನೇ ಭೇಟಿಯಾಗಿ ಮಾತನಾಡುತ್ತೇನೆ. ಎಲ್ಲ ಹಿರಿಯರ ಜೊತೆ ಸಮಾಲೋಚನೆ ನಡೆಸುತ್ತೇವೆ. ಒಗ್ಗಟ್ಟಾಗಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.
6
+ ಇದೇ ವೇಳೆ ಕರ ಸೇವಕ ಶ್ರೀ ಕಾಂತ್ ಪೂಜಾರಿ ಜಾಮೀನು ಸಿಕ್ಕಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಅವರು, ರಾಮ ಮಂದಿರದ ಉದ್ಘಾಟನೆ ಸಮಯದಲ್ಲಿ ಕಾಂಗ್ರೆಸ್ 31 ವರ್ಷಗಳ ಹಿಂದಿನ ಪ್ರಕರಣ ಕೆದಕಿರುವುದು ಶೋಭೆಯಲ್ಲ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಕಾಂಗ್ರೆಸ್ ರಾಮ ಭಕ್ತರ ಮೇಲೆ ದ್ವೇಷ ತೋರಿಸುತ್ತಿದೆ ಎಂದು ದೂರಿದರು.
eesanje/url_46_269_11.txt ADDED
@@ -0,0 +1,7 @@
 
 
 
 
 
 
 
 
1
+ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ರಸ್ತೆ ಬದಿ ನಿಂತಿದ್ದ ನಾಲ್ವರ ಮೇಲೆ ಹರಿದ ಲಾರಿ
2
+ ಹುಬ್ಬಳ್ಳಿ,ಜ.6- ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿಂದು ಮುಂಜಾನೆ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದಾಗ ಲಾರಿಯೊಂದು ವೇಗವಾಗಿ ಬಂದು ಮತ್ತೆ ಡಿಕ್ಕಿ ಹೊಡೆದ ಪರಿಣಾಮ ಹಾಸನದ ಮೂಲದ ಮೂವರು ಯುವಕರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ.
3
+ ಹಾಸನ ಜಿಲ್ಲೆಯ ಅರಕಲಗೂಡಿನ ಮಣಿಕಂಠ (26), ಪವನ್(23), ಚಂದನ್(31) ಮತ್ತು ಬೆಂಗಳೂರಿನ ಹರೀಶ್ (34) ಸಾವನ್ನಪ್ಪಿರುವ ದುರ್ದೈವಿಗಳು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
4
+ ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರುಗಳ ನಡುವೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಮುಂಜಾನೆ 4.30ರ ಸುಮಾರಿನಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ಎರಡು ಕಾರುಗಳಲ್ಲಿದ್ದ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಅವರನ್ನು ಆ್ಯಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
5
+ ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ
6
+ ಇನ್ನುಳಿದ ನಾಲ್ವರು ರಸ್ತೆ ಪಕ್ಕದಲ್ಲಿ ನಿಂತುಕೊಂಡು ಮಾತನಾಡುತ್ತಿದ್ದಾಗ ಅದೇ ಸಂದರ್ಭದಲ್ಲಿ ಹಾವೇರಿ ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಕುಂದಗೋಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ.ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ. ಮುಂಜಾನೆ ಮಂಜು ಆವರಿಸಿದ್ದ ಕಾರಣ ಈ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
7
+ ಸಚಿವರ ಭೇಟಿ:ಕಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ನಾಲ್ವರ ಮೃತದೇಹಗಳನ್ನು ಕಂಡು ಭಾವುಕರಾದರು. ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿರೀಕ್ಷಿತವಾಗಿ ಈ ಅಪಘಾತ ಸಂಭವಿಸಿದೆ. ಕಾರು ಅಪಘಾತದ ನಂತರ ರಸ್ತೆ ಬದಿ ನಿಂತವರವುಗಳ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಯಾವ ರೀತಿ ಅಪಘಾತ ಸಂಭವಿಸಿದೆ ಎಂಬುದರ ಬಗ್ಗೆ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಘಟನೆ ದುರಾದೃಷ್ಟಕರ ಎಂದರು.
eesanje/url_46_269_12.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಬಿಜೆಪಿ ನಾಯಕರ ವಿರುದ್ಧ ದಿನೇಶ್‍ ಗುಂಡೂರಾವ್ ಅಸಮಾಧಾನ
2
+ ಹುಬ್ಬಳ್ಳಿ,ಜ.6- ಬಿಜೆಪಿಯವರಿಗೆ ನೈಜ ಸಮಸ್ಯೆಗಳು ಬೇಕಿಲ್ಲ. ಅದಕ್ಕಾಗಿ ಒಬ್ಬ ವ್ಯಕ್ತಿಯ ಬಂಧನವನ್ನೇ ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದಾರೆ. ಜನರಿಗೆ ಇದರ ಹಿಂದಿನ ಕುತಂತ್ರಗಳು ಅರ್ಥವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದೇ ರೀತಿಯ ವೈಯಕ್ತಿಕ ಹಾಗೂ ಭಾವನಾತ್ಮಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿಯವರು ವಿಧಾನಸಭೆ ಚುನಾವಣೆಯನ್ನು ಎದುರಿಸಿದರು. ಅದಕ್ಕೆ ಜನ ತಕ್ಕ ಪಾಠ ಕಲಿಸಿದರು. ಆದರೂ ಬದಲಾಗದ ಬಿಜೆಪಿಯವರು ಮತ್ತೆ ಭಾವನಾತ್ಮಕ ವಿಚಾರಗಳಿಗೆ ಜೋತು ಬಿದ್ದಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಇದಕ್ಕಾಗಿ ಬೆಲೆ ತೆರುತ್ತಾರೆ ಎಂದು ಹೇಳಿದರು.
4
+ ಹುಬ್ಬಳ್ಳಿಯಲ್ಲಿನ ಶ್ರೀಕಾಂತ್ ಪೂಜಾರ್ ಮೇಲಿದ್ದ ರೌಡಿಪಟ್ಟಿಯನ್ನು ಕೈಬಿಟ್ಟಿದ್ದೇ ಕಾಂಗ್ರೆಸ್ ಸರ್ಕಾರ. ಬಾಕಿ ಇದ್ದ ಪ್ರಕರಣಗಳ ಕಾರಣಕ್ಕೆ ಆತನನ್ನು ಬಂಧಿಸಲಾಗಿದೆ. ಬಿಜೆಪಿಯವರು ಗಂಭೀರ ಸಮಸ್ಯೆಗಳನ್ನು ದಾರಿ ತಪ್ಪಿಸಲು ಕರಸೇವಕರ ಬಂಧನ ಎಂಬ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದರು.
5
+ ಪಿಎಸ್‍ಎಲ್‍ವಿ ಎಕ್ಸ್‌ಪೋಸ್ಯಾಟ್‌ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ : ಇಸ್ರೋ ಮುಖ್ಯಸ್ಥ ಸೋಮನಾಥ್
6
+ ಜಿಎಸ್‍ಟಿ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬರಪರಿಹಾರಕ್ಕೆ ಆರ್ಥಿಕ ನೆರವು ಸಿಕ್ಕಿಲ್ಲ. ವಿವಿಧ ಯೋಜನೆಗಳಡಿ ರಾಜ್ಯಕ್ಕೆ ಸಿಗಬೇಕಾದ ಪಾಲು ದೊರೆಯುತ್ತಿಲ್ಲ. ಇಂತಹ ಗಂಭೀರ ವಿಚಾರಗಳನ್ನು ಮರೆಮಾಚಲು ಧರ್ಮ, ದೇವರು ಎಂಬ ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪಿಸಿ ಮತ ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜನರಿಗೆ ಇದು ಅರ್ಥವಾಗುತ್ತದೆ ಎಂದು ಹೇಳಿದರು.
7
+ ಒಬ್ಬ ರೌಡಿಶೀಟರ್‍ನನ್ನು ಸಮರ್ಥಿಸಿಕೊಂಡು, ಭಾವನೆ ಕೆರಳಿಸಿ ಜನರ ಬದುಕಿನ ಸಮಸ್ಯೆಗಳನ್ನು ಕಡೆಗಣಿಸುತ್ತಿರುವ ಬಿಜೆಪಿಯನ್ನು ಜನ ಕ್ಷಮಿಸುವುದಿಲ್ಲ. ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೈಗೆತ್ತಿಕೊಳ್ಳಿ. 5 ಸಾವಿರ ಕೋಟಿ ರೂ.ಗಳ ಅನುದಾನ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಭರವಸೆ ನೀಡಿದರು. ಆದರೆ ಈಗ ಹಣ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ದೂರಿದರು.
8
+ ಗುಜರಾತ್‍ಗೆ ಹೆಚ್ಚು ಹಣ ನೀಡುತ್ತಿದ್ದಾರೆ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡಿ. ಅದರ ಬದಲು ಭಾವನಾತ್ಮಕ ವಿಚಾರಗಳ ಪ್ರಸ್ತಾಪ ಅನಗತ್ಯ. ಹಿಂದೂ ಧರ್ಮ ಯಾರೊಬ್ಬರ ಸ್ವತ್ತೂ ಅಲ್ಲ. ಪ್ರತಿಯೊಂದೂ ಗ್ರಾಮದಲ್ಲೂ ಶ್ರೀ ರಾಮನ ದೇವಸ್ಥಾನವಿದೆ. ಬಿಜೆಪಿ ಇಲ್ಲದೇ ಇದ್ದಾಗಲೂ ದೇವಸ್ಥಾನದ ನಿರ್ಮಾಣವಾಗಿದೆ. ಪೂಜೆ ನಡೆಯುತ್ತಿದೆ. ಅಯೋಧ್ಯೆಯ ರಾಮಮಂದಿರವೊಂದೇ ದೇಶದ ವಿಚಾರವಲ್ಲ ಎಂದು ಹೇಳಿದರು.
9
+ ಧರ್ಮ ಮತ್ತು ದೇವರನ್ನು ಒಂದು ಪಕ್ಷಕ್ಕೆ ದತ್ತು ಕೊಡಲು ಸಾಧ್ಯವಿಲ್ಲ. ಬಿಜೆಪಿಯವರು ಇದ್ದರೆ ಮಾತ್ರ ಹಿಂದು, ಇಲ್ಲವಾದರೆ ಹಿಂದೂವಿರೋಧಿಗಳು ಎಂಬುದು ಹಾಸ್ಯಾಸ್ಪದ. ಧರ್ಮ ಸಂಪೂರ್ಣ ವೈಯಕ್ತಿಕ. ನಮ್ಮಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಗೆ ಮೊದಲಿನಿಂದಲೂ ಉತ್ತಮ ಉದಾಹರಣೆಗಳಿವೆ ಎಂದರು.
10
+ ನಾವು ಯಾವ ಧರ್ಮ ಪಾಲಿಸಬೇಕು. ದೇಶ ಹೇಗೆ ನಡೆಯಬೇಕು ಎಂಬ ಎಲ್ಲಾ ವಿಚಾರಗಳ ಬಗ್ಗೆಯೂ ಸಂವಿಧಾನದಲ್ಲಿ ಸ್ಪಷ್ಟತೆ ಇದೆ. ಬಿಜೆಪಿಯವರು ಹೇಳಿದ್ದನ್ನೆಲ್ಲಾ ಕೇಳಲಾಗುವುದಿಲ್ಲ ಎಂದು ಹೇಳಿದರು.ಕೇರಳ, ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಇಲ್ಲಿ ನಾವು ಹೆಚ್ಚು ಪರೀಕ್ಷೆಗಳನ್ನು ಮಾಡುತ್ತಿದ್ದಾರೆ. ಯಾರಿಗೂ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಮುಂಜಾಗ್ರತೆ ವಹಿಸಿದ್ದೇವೆ.
11
+ ಕೋವಿಡ್ ಮತ್ತು ಅದರ ರೂಪಾಂತರಿಗಳು ವಿಶ್ವಾದ್ಯಂತ ಹರಡುತ್ತಿವೆ. ಆತಂಕಪಡುವ ಅಗತ್ಯವಿಲ್ಲ. ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯರು ಮತ್ತು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸುವ ಅಗತ್ಯವಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.
12
+ ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ
13
+ ಧಾರವಾಡ ಜಿಲ್ಲೆಯಲ್ಲಿ 9 ತಾಲೂಕು, ಒಂದು ಜಿಲ್ಲಾಸ್ಪತ್ರೆ ಸೇರಿ ಒಟ್ಟು 10 ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಐಸಿಯು ಸೌಲಭ್ಯವನ್ನು ಉದ್ಘಾಟಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಾಲೂಕು ಆಸ್ಪತ್ರೆಗಳಲ್ಲೂ ಟೆಲಿ ಸೌಲಭ್ಯದ ಮೂಲಕ ತಜ್ಞ ವೈದ್ಯರ ಸಲಹೆ, ಸೂಚನೆ ಮತ್ತು ಚಿಕಿತ್ಸೆ ದೊರಕಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಜಿಲ್ಲಾ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಿದರು.
eesanje/url_46_269_2.txt ADDED
@@ -0,0 +1,6 @@
 
 
 
 
 
 
 
1
+ ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ
2
+ ಬೀಜಿಂಗ್, ಜ.7: ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕದ ಐದು ರಕ್ಷಣಾ ಸಂಬಂಧಿತ ಕಂಪನಿಗಳ ಮೇಲೆ ಚೀನಾ ನಿರ್ಬಂಧ ಘೋಷಿಸಿದೆ. ಚೀನಾದ ಸಂಸ್ಥೆಗಳು ಮತ್ತು ವ್ಯಕ್ತಿಗಳು ಅವರೊಂದಿಗೆ ವ್ಯಾಪಾರ ಮಾಡುವುದನ್ನು ನಿಷೇಧಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಆನ್‍ಲೈನ್‍ನಲ್ಲಿ ಹೇಳಿಕೆಯಲ್ಲಿ ನೀಡಿದೆ.
3
+ ಅಮೆರಿಕದ ಕಂಪನಿಗಳಾದ ಬಿಎಇ ಸಿಸ್ಟಮ್ಸ್ ಲ್ಯಾಂಡ್ ಮತ್ತು ಆರ್ಮಮೆಂಟ್, ಅಲೈಂಟ್ ಟೆಕ್ಸಿಸ್ಟಮ್ಸ್ ಆಪರೇಷನ್, ಏರೋವೈರಾನ್ಮೆಂಟ್, ವಯಾಸ್ಯಾಟ್ ಮತ್ತು ಡೇಟಾ ಲಿಂಕ್ ಸೊಲ್ಯೂಷನ್ಸ್ ದೇಶದಲ್ಲಿ ತಟಸ್ಥಗೊಳ್ಳಲಿದೆ. ಅಮೆರಿಕದ ನಡೆಗಳು ಚೀನಾದ ಸಾರ್ವಭೌಮತ್ವ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಹಾನಿಯುಂಟುಮಾಡಿದೆ, ತೈವಾನ್ ಜಲಸಂಧಿಯಾದ್ಯಂತ ಶಾಂತಿ ಮತ್ತು ಸ್ಥಿರತೆಯನ್ನು ಹಾಳುಮಾಡಿದೆ ಮತ್ತು ಚೀನಾದ ಕಂಪನಿಗಳು ಮತ್ತು ವ್ಯಕ್ತಿಗಳ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಉಲ್ಲಂಸಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
4
+ ಡಿಜೆ ಹಳ್ಳಿ-ಕೆಜೆ ಹಳ್ಳಿ ಪ್ರಕರಣದ ಕೈದಿಗಳ ಬಿಡುಗಡೆಗೆ ಡಿಸಿಎಂ ಬಳಿ ಮನವಿ
5
+ ರಾಷ್ಟ್ರೀಯ ಸಾರ್ವಭೌಮತೆ, ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡುವ ಮತ್ತು ಚೀನೀ ಕಂಪನಿಗಳು ಮತ್ತು ನಾಗರಿಕರ ಕಾನೂನುಬದ್ಧ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವ ನಮ್ಮ ಸಂಕಲ್ಪದಲ್ಲಿ ಚೀನಾ ಸರ್ಕಾರವು ಅಚಲವಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
6
+ ಚೀನಾ ತನ್ನ ಪೂರ್ವ ಕರಾವಳಿಯ ದ್ವೀಪ ದೇಶ ತೈವಾನ್ ಅನ್ನು ಒಂದು ದಂಗೆಕೋರ ಪ್ರಾಂತ್ಯವೆಂದು ಪರಿಗಣಿಸುತ್ತದೆ, ಅದು ಭವಿಷ್ಯದಲ್ಲಿ ಕೆಲವು ಹಂತದಲ್ಲಿ ಚೀನಾಗೆ ನಿಯಂತ್ರಣಕ್ಕೆ ಬರಬೇಕು ಎಂದು ಪಣತೊಟ್ಟಿದೆ.
eesanje/url_46_269_3.txt ADDED
@@ -0,0 +1,7 @@
 
 
 
 
 
 
 
 
1
+ ಕನ್ನಡ ನಾಡಿನ ಅಸ್ಮಿತೆಗೆ ಹೆಸರಾದ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯ : ಸಚಿವ ಎಂ.ಬಿ.ಪಾಟೀಲ
2
+ ಬೆಂಗಳೂರು: ಕನ್ನಡ ನಾಡಿನ ಅಸ್ಮಿತೆಗೆ ಹೆಸರಾದ ಸರ್ಕಾರಿ ಉದ್ದಿಮೆಗಳ ಉತ್ಪನ್ನಗಳ ಎರಡು ಮಾರಾಟ ಮಳಿಗೆಗಳು “ಕಲಾಲೋಕ” ಹೆಸರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಪ್ರಿಲ್ ವೇಳೆಗೆ ಆರಂಭವಾಗಲಿವೆ. ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರು ವಿಮಾನ ನಿಲ್ದಾಣದ ಅಧಿಕಾರಿಗಳ (ಬಿಐಎಎಲ್) ಉಪಸ್ಥಿತಿಯಲ್ಲಿ ಶನಿವಾರ ನಡೆಸಿದ ಸಭೆಯಲ್ಲಿ ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
3
+ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ ಎಸ್ ಡಿ ಎಲ್), ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕೆಎಸ್ಐಸಿ (ಕರ್ನಾಟಕ ರೇಷ್ಮೆ ಉದ್ಯಮ ನಿಗಮ), ಕಾಫಿ ಬೋರ್ಡ್ ಮತ್ತು ಲಿಡ್ಕರ್ ಸಂಸ್ಥೆಗಳು ತಯಾರಿಸುವ ಉತ್ಪನ್ನಗಳನ್ನು ಈ ಮಳಿಗೆಗಳಲ್ಲಿ ಮಾರಾಟ ಮಾಡಲಾಗುವುದು. ಇವುಗಳೊಟ್ಟಿಗೆ ನಾಡಿನಲ್ಲಿ ತಯಾರಾಗುವ ಪಾರಂಪರಿಕ ಆಟಿಕೆಗಳಾದ ಚನ್ನಪಟ್ಟಣ ಆಟಿಕೆ, ಇಳಕಲ್ ಸೀರೆ, ಲಂಬಾಣಿ ಕುಸೂತಿ ಇತ್ಯಾದಿ ಉತ್ಪನ್ನಗಳನ್ನು ಕೂಡ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಾಗಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.
4
+ ಇದಕ್ಕಾಗಿ, ಹೊಸದಾಗಿ ನಿರ್ಮಿಸಿರುವ ಟರ್ಮಿನಲ್-2ರ ದೇಶೀಯ ಮತ್ತು ಅಂತರರಾಷ್ಟ್ರೀಯ ನಿರ್ಗಮನ ವಲಯದಲ್ಲಿ ತಲಾ 180 ಚದುರ ಮೀಟರ್ ಗಳ ಜಾಗ ಗುರುತಿಸಲಾಗಿದೆ. ಅಲ್ಲಿ ವಿಭಿನ್ನ‌ ಶೈಲಿಯಲ್ಲಿ ವಿನ್ಯಾಸಗೊಳಿಸಿದ ಆಕರ್ಷಕ ಮಳಿಗೆಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು ಎಂದರು.
5
+ ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್
6
+ ನಮ್ಮ ನಾಡಿನ ಅಸ್ಮಿತೆ ಬಿಂಬಿಸುವ ಈ ಸಂಸ್ಥೆಗಳ ಉತ್ಪನ್ನಗಳನ್ನು ವಿಮಾನ ನಿಲ್ದಾಣದಲ್ಲಿನ ಗ್ರಾಹಕರಿಗೆ ಒಂದೇ ಸೂರಿನಡಿ ಸಿಗುವಂತೆ ಮಾಡುವುದು ಇದರ ಉದ್ದೇಶವಾಗಿದ್ದು, ಕೈಗಾರಿಕಾ ಇಲಾಖೆಯು ಇದರ ಉಸ್ತುವಾರಿ ವಹಿಸಲಿದೆ ಎಂದು ತಿಳಿಸಿದರು.
7
+ ವಿಮಾನ ನಿಲ್ದಾಣದ ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಅದಕ್ಕೆ ತಕ್ಕಂತೆ ಉತ್ಪನ್ನಗಳ ಬ್ರ್ಯಾಂಡಿಂಗ್ ಮಾಡಲು ಗಮನಹರಿಸಲಾಗುವುದು ಎಂದೂ ಪಾಟೀಲ ತಿಳಿಸಿದರು. ಕಾಫಿ ಬೋರ್ಡ್, ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದಾದರೂ ಸ್ಥಾಪನೆಯಾಗಲಿರುವ ಮಳಿಗೆಗಳಲ್ಲಿ ಕರ್ನಾಟಕ ಮೂಲದ ಕಾಫಿ ಸ್ವಾದಗಳು ಸೇವನೆಗೆ ಲಭ್ಯವಿರುತ್ತವೆ. ಜೊತೆಗೆ, ಇಲ್ಲಿನ ವಿವಿಧ ನಮೂನೆಯ ಕಾಫಿ ಪುಡಿಯನ್ನು ಗ್ರಾಹಕರು ಕೊಳ್ಳಬಹುದಾಗಿರುತ್ತದೆ ಎಂದರು. ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ವಿಮಾನ ನಿಲ್ದಾಣದ ಉಪಾಧ್ಯಕ್ಷ ವೆಂಕಟರಾಮನ್, ಕೆಎಸ್ಎಂಸಿಎ ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಪೂಜಾರ್ ಮತ್ತಿತರರು ಸಭೆಯಲ್ಲಿದ್ದರು.
eesanje/url_46_269_4.txt ADDED
@@ -0,0 +1,6 @@
 
 
 
 
 
 
 
1
+ ಡಿಜೆ ಹಳ್ಳಿ-ಕೆಜೆ ಹಳ್ಳಿ ಪ್ರಕರಣದ ಕೈದಿಗಳ ಬಿಡುಗಡೆಗೆ ಡಿಸಿಎಂ ಬಳಿ ಮನವಿ
2
+ ಬೆಂಗಳೂರು,ಜ.6- ಡಿ.ಜೆ.ಹಳ್ಳಿ/ಕೆ.ಜೆ.ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ 37 ಮಂದಿಯನ್ನು ಬಿಡುಗಡೆ ಮಾಡಿಸಬೇಕು ಎಂದು ಕುಟುಂಬದ ಸದಸ್ಯರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ ರವರಲ್ಲಿ ಮನವಿ ಮಾಡಿದ್ದಾರೆ. ಶಿವಾಜಿನಗರದ ಆರ್‍ಬಿಎಎನ್‍ಎಂಎನ್‍ಎಂಎಸ್ ಹೈಸ್ಕೂಲ್ ಮೈದಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಜನತಾದರ್ಶನದಲ್ಲಿ ಭಾಗವಹಿಸಿದ್ದ ಕುಟುಂಬದ ಸದಸ್ಯರು ಲಿಖಿತ ಮನವಿ ಸಲ್ಲಿಸಿದ್ದಾರೆ.
3
+ 37 ಮಂದಿ ಆರೋಪಿಗಳ ಕುಟುಂಬ ಸದಸ್ಯರ ಮಹಿಳೆಯರು ಈ ಸಂದರ್ಭದಲ್ಲಿ ಮಾತನಾಡಿ, ಬಂಧಿತರನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು. ನಮ್ಮ ಮನೆಯವರು ಯಾವುದೇ ಗಲಾಟೆಯಲ್ಲಿ ಭಾಗವಹಿಸಿಲ್ಲ. ಗಲಭೆ ನಡೆಯುತ್ತಿದ್ದುದನ್ನು ನೋಡುತ್ತಾ ನಿಂತಿದ್ದರು. ಪೊಲೀಸರು ಅವರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಯುಎಪಿಎಯಂತಹ ಪ್ರಬಲ ಕಾನೂನು ಹಾಕಲಾಗಿದೆ ಎಂದು ಅಳಲು ತೋಡಿಕೊಂಡರು.
4
+ ಕಳೆದ ಮೂರೂವರೆ ವರ್ಷಗಳಿಂದಲೂ ದುಡಿಯುವ ಗಂಡಸರನ್ನು ಜೈಲಿನಲ್ಲಿಟ್ಟಿದ್ದಾರೆ. ಇದರಿಂದ ಕುಟುಂಬಗಳು ಅನಾಥವಾಗಿವೆ. ಕಾಂಗ್ರೆಸ್ ವಿಧಾನಸಭೆ ಚುನಾವಣೆಗೂ ಮುನ್ನ ಕೆ.ಜೆ.ಹಳ್ಳಿ/ಡಿ.ಜೆ.ಹಳ್ಳಿ ಗಲಭೆಯಲ್ಲಿ ಭಾಗಿಯಾದವರನ್ನು ಬಿಡುಗಡೆ ಮಾಡುವಂತೆ ಭರವಸೆ ನೀಡಿತ್ತು. ಸರ್ಕಾರ ಬಂದು 7 ತಿಂಗಳಾಗಿವೆ.
5
+ ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್
6
+ ಈವರೆಗೂ ಕ್ರಮ ಕೈಗೊಂಡಿಲ್ಲ. ಶಾಸಕರು ಸೇರಿದಂತೆ ಹಲವರಿಗೆ ಮನವಿ ನೀಡಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡರು. ಇದಕ್ಕೂ ಮುನ್ನ ಮಹಿಳೆಯರು ಮನವಿಗಳನ್ನು ನೋಂದಣಿ ಮಾಡಿಸಿ ನಂತರ ಡಿಸಿಎಂಗೆ ಅರ್ಜಿ ಸಲ್ಲಿಸಿದರು.
eesanje/url_46_269_5.txt ADDED
@@ -0,0 +1,6 @@
 
 
 
 
 
 
 
1
+ ಅನಾರೋಗ್ಯದ ನಡುವೆಯೂ ಜನಸ್ಪಂದನದಲ್ಲಿ ಭಾಗವಹಿಸಿ ಗಮನ ಸೆಳೆದ ಡಿಸಿಎಂ
2
+ ಬೆಂಗಳೂರು,ಜ.6- ಅನಾರೋಗ್ಯದ ನಡುವೆಯೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದರು. ಕೈಗೆ ಇಂಜೆಕ್ಷನ್ ಹಾಕಿಕೊಳ್ಳುವ ಬ್ಯಾಂಡೇಜ್‍ನೊಂದಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್‍ರವರು ಅನಾರೋಗ್ಯವನ್ನು ಮರೆತು ಜನರ ಸಮಸ್ಯೆ ಕೇಳಲು ಮುಂದಾದರು.
3
+ ಸಂಪೂರ್ಣ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದರೂ ಅದನ್ನು ಕಡೆಗಣಿಸಿ ಉಪಮುಖ್ಯಮಂತ್ರಿಯವರು ನಿಮ್ಮ ಕಷ್ಟ ಕೇಳಲು ಆಗಮಿಸಿದ್ದಾರೆ. ಅವರ ಬದ್ಧತೆ ಅನುಕರಣನೀಯ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕೊಂಡಾಡಿದರು. ವೇದಿಕೆಯ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಿನ್ನೆಯಿಂದಲೂ ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ. ವೈದ್ಯರು ವಿಶ್ರಾಂತಿಗೆ ಸೂಚನೆ ನೀಡಿದ್ದಾರೆ. ಆದರೆ ನಾನೇ ಸಮಯ ನೀಡಿ ಈ ಕಾರ್ಯಕ್ರಮ ನಿಗದಿ ಮಾಡಿದ್ದೇನೆ. ಗೈರುಹಾಜರಾದರೆ ಅದು ಸರಿಯಲ್ಲ ಎಂಬ ಕಾರಣಕ್ಕಾಗಿ ಬಂದಿದ್ದೇನೆ ಎಂದರು.
4
+ ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್
5
+ ಈವರೆಗೂ ಬೆಂಗಳೂರಿನಲ್ಲಿ 6 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 7 ಸಾವಿರ ಜನ ಜನಸ್ಪಂದನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ್ದಾರೆ. ಸಂಜೆ 6 ಗಂಟೆಯವರೆಗೂ ಕುಳಿತು ಜನರ ಸಮಸ್ಯೆ ಆಲಿಸಿದ್ದೇನೆ. ಇಂದು ಅನಾರೋಗ್ಯ ಇರುವುದರಿಂದ ಹೆಚ್ಚು ಸಮಯ ಇಲ್ಲಿರಲು ಸಾಧ್ಯವಿಲ್ಲ. ನಾನೇ ನಿಮ್ಮ ಬಳಿ ಬಂದು ಅರ್ಜಿ ಪಡೆದುಕೊಳ್ಳುತ್ತೇನೆ. ಒಂದು ವೇಳೆ ನನ್ನನ್ನು ಖುದ್ದು ಭೇಟಿ ಮಾಡಿ ದೂರು ಹೇಳಿಕೊಳ್ಳಬೇಕು ಎನ್ನುವವರು ಇಂದು ಸಾಧ್ಯವಾಗದೇ ಇದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ಇತರ ಕ್ಷೇತ್ರಗಳಲ್ಲಿ ನಡೆಯುವ ಜನಸ್ಪಂದನದಲ್ಲೂ ಭಾಗವಹಿಸಿ ಭೇಟಿ ಮಾಡಬಹುದು ಎಂದರು.
6
+ ಆದರೆ ಇಲ್ಲಿ ಅರ್ಜಿಗಳನ್ನು ನೋಂದಣಿ ಮಾಡಿಸಿಕೊಂಡರೆ ನನಗೆ ಅರ್ಜಿ ನೀಡಿದಂತೆಯೇ ಲೆಕ್ಕ. ನಿಮ್ಮ ಸಮಸ್ಯೆಗೆ ಸ್ಪಂದನೆ ದೊರೆಯುತ್ತದೆ. ಯಾವುದೇ ಆತಂಕ ಬೇಡ ಎಂದು ಸ್ಪಷ್ಟಪಡಿಸಿದರು.
eesanje/url_46_269_6.txt ADDED
@@ -0,0 +1,7 @@
 
 
 
 
 
 
 
 
1
+ ಸಿರಿಧಾನ್ಯ ಸಾವಯವ ಮೇಳ ಯಶಸ್ವಿ
2
+ ಬೆಂಗಳೂರು,ಜ.6- ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವು ಅರ್ಥಗರ್ಭಿತವಾಗಿ ಯಶಸ್ವಿಯಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇಳ ಉದ್ಘಾಟನೆ ಮಾಡಿದ ನಂತರ ನಿನ್ನೆ ಮೊದಲ ದಿನವೇ 60 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸಿದ್ದಾರೆ ಎಂದರು.
3
+ 61 ಸಭೆಗಳಲ್ಲಿ 23.14 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಪೈಕಿ 1,361 ಮೆಟ್ರಿಕ್ ಟನ್ ಪ್ರಮಾಣದ 5.10 ಕೋಟಿ ಮೌಲ್ಯದ 6 ಒಪ್ಪಂದಗಳಾಗಿವೆ. ಕೀನ್ಯಾ, ಕುವೈತ್, ಆಸ್ಟ್ರೇಲಿಯಾ, ಯೂರೋಪ್, ಯುಎಇ ದೇಶಗಳ ಮಾರುಕಟ್ಟೆದಾರರು ಮೇಳದಲ್ಲಿ ಭಾಗವಹಿಸಿದ್ದಾರೆ. ಏಳು ಅಂತಾರಾಷ್ಟ್ರೀಯ, 40 ಹೊರರಾಜ್ಯಗಳ ಹಾಗೂ 50 ರಾಜ್ಯದ ಮಾರುಕಟ್ಟೆದಾರರು ಸಭೆಗಳಲ್ಲಿ ಭಾಗವಹಿಸಿದ್ದಾರೆ. 97 ಮಾರುಕಟ್ಟೆ ದಾರರು, 154 ಉತ್ಪಾದಕರು ಬಿ2ಬಿ ಸಭೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.
4
+ 310 ಮಳಿಗೆಗಳು ಮೇಳದಲ್ಲಿದ್ದು, 190 ಮಳಿಗೆಗಳು ಸಾವಯವ ಮತ್ತು ಸಿರಿಧಾನ್ಯ ಸಂಸ್ಥೆಗಳು, ರಫ್ತುದಾರರು, ಮಾರಾಟಗಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಸಾವಯವ ಪರಿಕರ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ಸಂಸ್ಥೆಗಳು ಪಾಲ್ಗೊಂಡಿವೆ ಎಂದರು.
5
+ ಈ ಮೇಳ ಅಸಾಧರಣ ಅನುಭವ ನೀಡಿದ್ದು, ಕೃಷಿ ಮಂತ್ರಿಯಾಗಿರುವುದಕ್ಕೆ ಖುಷಿಯಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ರೈತರು ಹೆಚ್ಚು ಹೆಚ್ಚು ಸಿರಿಧಾನ್ಯಗಳನ್ನು ಬೆಳೆಯಬೇಕು. ಕಡಿಮೆ ಖರ್ಚು, ಕಡಿಮೆ ಸಮಯದಲ್ಲಿ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಸಬಹುದು. ಪ್ರಸ್ತುತ ಹೆಕ್ಟೇರ್‍ಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
6
+ ಸಿರಿಧಾನ್ಯದ ಆಹಾರದ ಉತ್ಪನ್ನಗಳು ಹೆಚ್ಚು ರುಚಿಕರವಾಗಿವೆ. ನವಣೆ ಮಸಾಲೆ ಬ್ರೆಡ್, ರಾಗಿ ಬ್ರೆಡ್, ಫಿಜ್ಜಾ, ಬರ್ಗರ್, ನೂಡಲ್ಸ್, ವಿವಿಧ ರೀತಿಯ ಬಿಸ್ಕತ್ತು, ಚಕ್ಕುಲಿ, ಚಿಕ್ಕಿ ಅಲ್ಲದೆ ವಿಶೇಷ ವಾಗಿ ಯುವ ಪೀಳಿಗೆ ಇಷ್ಟ ಪಡುವ ಆಧುನಿಕ ಸಿರಿಧಾನ್ಯ ಬ್ರೌನಿ, ಬಫ್ತಿನ್ಸ್, ರಾಗಿ ಚಾಕಲೇಟ್, ಜಾಮುನು ಆಕರ್ಷಕವಾಗಿವೆ ಎಂದರು.
7
+ ಈ ವರ್ಷ 16 ರಾಜ್ಯಗಳು ಭಾಗವಹಿಸಿದ್ದು, ಹೆಚ್ಚು ಅರ್ಥಪೂರ್ಣವಾಗಿದೆ. 50 ಪರಿಣಿತರು ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದ್ದಾರೆ ಎಂದರು. ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ರೈತ ಸಿರಿ ಯೋಜನೆಯಡಿ ಹೆಕ್ಟೇರ್‍ಗೆ 10 ಸಾವಿರದಂತೆ ಒಂದು ಲಕ್ಷ ರೈತರಿಗೆ ಪೆÇ್ರೀತ್ಸಾಹ ಧನ ನೀಡಲಾಗಿದೆ ಎಂದರು.ಗೋಷ್ಠಿಯಲ್ಲಿ ಕೃಷಿ ಆಯುಕ್ತ ಪಾಟೀಲ್, ನಿರ್ದೇಶಕ ಡಾ.ಪುತ್ರ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಉಪಸ್ಥಿತರಿದ್ದರು.
eesanje/url_46_269_7.txt ADDED
@@ -0,0 +1,6 @@
 
 
 
 
 
 
 
1
+ ರಾಮಮಂದಿರ ಉದ್ಘಾಟನೆ ಸಂಭ್ರಮ ಹಾಳುಮಾಡಲು ಕಾಂಗ್ರೆಸ್ ಕುತಂತ್ರ : ಬಿಜೆಪಿ ಆರೋಪ
2
+ ಬೆಂಗಳೂರು,ಜ.6- ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಅದ್ಧೂರಿಯಾಗಿ ನೆರವೇರಲಿದೆ. ಮಂದಿರದ ಉದ್ಘಾಟನೆಯ ಸಂಭ್ರಮದಲ್ಲಿ ಇಡೀ ದೇಶವೇ ಇರುವಾಗ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಕುತಂತ್ರ ಹೆಣೆಯುತ್ತಿದೆ ಎಂದು ಬಿಜೆಪಿ ಆರೋಪಗಳ ಮಳೆ ಸುರಿಸಿದೆ.
3
+ ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್, ಅಯೋಧ್ಯೆಗೆ ಹೋಗುವವರಿಗೆ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಲಾಗಿದೆ. ಈ ಸಂಭ್ರಮದ ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದಂತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು ಆರೋಪಿಸಿದೆ.
4
+ ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್
5
+ ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್ ಜಾರಿಗೆ ಸಿದ್ಧತೆ ನಡೆದಿದೆ. ರಾಮ ಮಂದಿರ ಉದ್ಘಾಟನೆಯ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತಗೊಳಿಸಲು ತಂತ್ರ ಹೆಣೆಯಲಾಗಿದೆ. ಮನೆ ಮನೆಯ ಟಿವಿ ಕೇಬಲ್ ಸಂಪರ್ಕ ತಪ್ಪಿಸುವ ದುರುದ್ದೇಶ ಕಾಂಗ್ರೆಸಿನದ್ದಾಗಿದೆ ಎಂದು ಬಿಜೆಪಿ ಆರೋಪಿಸಿದೆ.
6
+ ರಾಮ ಬಂಟ ಹನುಮನ ನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಎಕ್ಸ್‍ನಲ್ಲಿ ಬರೆದುಕೊಂಡಿದೆ.
eesanje/url_46_269_8.txt ADDED
@@ -0,0 +1,8 @@
 
 
 
 
 
 
 
 
 
1
+ ದಲಿತರ ಮತ ಸೆಳೆಯಲು ಬಿಜೆಪಿಯಿಂದ ಭೀಮಾ ಸಮಾವೇಶ
2
+ ಬೆಂಗಳೂರು,ಜ.6-ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ದಲಿತ ಮತಗಳ ಓಲೈಕೆಗೆ ಮುಂದಾಗಿದ್ದು, ಪ್ರತಿ ಜಿಲ್ಲೆಯಲ್ಲೂ ಭೀಮಾ ಸಮಾವೇಶ ನಡೆಸಲು ಮುಂದಾಗಿದೆ. ಒಂದು ಕಡೆ ಕಾಂಗ್ರೆಸ್ ಚಿತ್ರ ದುರ್ಗದಲ್ಲಿ ಅಹಿಂದ ಸಮಾವೇಶ ನಡೆಸಲು ಮುಂದಾಗಿರುವ ಬೆನ್ನಲ್ಲೇ ಬಿಜೆಪಿ ಭೀಮ ಸಮಾವೇಶವನ್ನು ನಡೆಸಲು ಮುಂದಾಗಿರುವುದು ಮಹತ್ವ ಪಡೆದುಕೊಂಡಿದೆ.
3
+ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ದೂರವಾಗಿದ್ದ ದಲಿತ ಮತಗಳನ್ನು ಪುನಃ ತನ್ನತ್ತ ಸೆಳೆಯಲು ಕಾರ್ಯ ತಂತ್ರ ರೂಪಿಸುತ್ತಿರುವ ಬಿಜೆಪಿ, ಜಿಲ್ಲಾ ಕೇಂದ್ರಗಳಲ್ಲಿ ಭೀಮಾ ಸಮಾವೇಶವನ್ನು ನಡೆಸಿ ಬಳಿಕ ಮಧ್ಯ ಕರ್ನಾಟಕದಲ್ಲಿ ಬೃಹತ್ ರಾಜ್ಯ ಮಟ್ಟದ ಸಮಾವೇಶ ನಡೆಸಲು ತೀರ್ಮಾನಿಸಿದೆ. ಪ್ರತಿ ಜಿಲ್ಲೆಯಲ್ಲೂ ಒಂದೊಂದು ಸಮಾವೇಶಕ್ಕೆ 50ರಿಂದ ಒಂದು ಲಕ್ಷದವರೆಗೂ ಜನರನ್ನು ಸೇರಿಸಬೇಕೆಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜಿಲ್ಲಾ ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
4
+ ಫೆಬ್ರವರಿ ತಿಂಗಳ ಅಂತ್ಯಕ್ಕೆ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಸಮಾವೇಶವನ್ನು ನಡೆಸಲು ಉದ್ದೇಶಿಸಿದ್ದು, ಸಾಧ್ಯವಾದರೆ ಪ್ರಧಾನಿ ನರೇಂದ್ರಮೋದಿ ಇಲ್ಲವೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಆಹ್ವಾನಿಸುವ ಲೆಕ್ಕಾಚಾರದಲ್ಲಿ ಬಿಜೆಪಿಯಿದೆ. ಈಗಾಗಲೇ ಸಮಾವೇಶಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಸಮಾವೇಶ ಆರಂಭಗೊಳ್ಳಲಿದೆ.
5
+ ಮೂವರು ಡಿಸಿಎಂಗಳ ನೇಮಕ ಗಾಳಿಸುದ್ದಿ ಅಷ್ಟೇ : ಗೃಹ ಸಚಿವ ಪರಮೇಶ್ವರ
6
+ ಬಳಿಕ ವಾರಕ್ಕೆ ಎರಡೆರಡು ಸಮಾವೇಶಗಳು ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. ಮಧ್ಯ ಕರ್ನಾಟಕದಲ್ಲೇ ಫೆಬ್ರವರಿಯಲ್ಲಿ ರಾಜ್ಯ ಮಟ್ಟದ ಭೀಮ ಸಮಾವೇಶ ಆಯೋಜನೆ ಮಾಡಲು ಬಿಜೆಪಿ ಚಿಂತಿಸುತ್ತಿದೆ. ಲೋಕಸಭಾ ಚುನಾವಣೆಗೆ ದಲಿತ ಮತಗಳನ್ನು ಸೆಳೆಯಲು ತಂತ್ರ ಹೆಣೆಯುತ್ತಿದೆ. ಕಾಂಗ್ರೆಸ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಸಮಾವೇಶ ನಡೆಸಲು ಮುಂದಾಗಿದೆ.
7
+ ಮತ್ತೊಂದೆಡೆ ನಿನ್ನೆ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಬಲವರ್ಧನೆಗಾಗಿ ನಡೆದ ಭೀಮ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವುದಾಗಿ ತಿಳಿಸಿದ್ದಾರೆ. ಪಕ್ಷ ಬಲಪಡಿಸಲು ಶೀಘ್ರವೇ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯ ಪ್ರವಾಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಮೋದಿಯವರ ಕೈ ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
8
+ ಚುನಾವಣೆ ದೃಷ್ಟಿಯಿಂದ ರಾಜ್ಯ ಪ್ರವಾಸದ ವೇಳೆ ಪ್ರಮುಖರ ಜೊತೆಗೆ ಮಾತನಾಡುವೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಲೋಕಸಭಾ ಚುನಾವಣೆಯಲ���ಲಿ ಬಿಜೆಪಿಗೆ ಬಲ ತುಂಬಬೇಕು ಎಂದು ಮನವಿ ಮಾಡಿದ್ದಾರೆ.
eesanje/url_46_269_9.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ನನ್ನ ಸೋಲಿಗೆ ಕಾರಣರಾದವರ ಮೇಲೆ ಕ್ರಮ ಜರುಗಿಸಿ ; ಸೋಮಣ್ಣ
2
+ ಬೆಂಗಳೂರು,ಜ.6- ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರ ಮೇಲೆ ಕೂಡಲೇ ಶಿಸ್ತು ಕ್ರಮ ಜರುಗಿಸದಿದ್ದರೆ ಇದೇ ತಿಂಗಳ 16ರಂದು ಎಲ್ಲವನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಸ್ವಪಕ್ಷದ ವಿರುದ್ಧವೇ ಗುಡುಗಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಯಾರು? ಹೇಗೆ ಕೆಲಸ ಮಾಡಿದ್ದಾರೆ, ಏನೇನು ಮಾಡಿದ್ದಾರೆ ಎಂಬುದು ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಗೊತ್ತಿದೆ. ಕೂಡಲೇ ಅವರು ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ನಾನೇ ಬಹಿರಂಗಪಡಿಸುತ್ತೇನೆ ಎನ್ನುವ ಮೂಲಕ ವಿಜಯೇಂದ್ರ ಆಪ್ತ ರುದ್ರೇಶ್‍ಗೆ ಎಚ್ಚರಿಕೆ ಕೊಟ್ಟರು.
4
+ ನಮ್ಮಂತಹವರ ಮೇಲೆ ಗದಾಪ್ರಹಾರ ಮಾಡಿದರೆ ಪರಿಣಾಮ ಏನಾಗುತ್ತದೆ ಎಂಬುದನ್ನು ಚಿಂತನೆ ಮಾಡಬೇಕು. ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಹಿಂದಿನದ್ದೇ ನಡೆಸಿಕೊಂಡು ಹೋಗುತ್ತೇನೆ ಎಂಬುದನ್ನು ಬಿಡಬೇಕು ಎಂದರು.
5
+ ಚಾಮರಾಜನಗರ ಜಿಲ್ಲೆಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ವಿಜಯೇಂದ್ರ ರಾಜ್ಯಾಧ್ಯಕ್ಷರು, ಎಲ್ಲಿಗೆ ಬೇಕಾದರೂ ಹೋಗಲಿ ಎಂದು ಸಿಡಿಮಿಡಿಗೊಂಡರು. ನಾನು ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ. ಆದರೆ ನಮ್ಮವರೇ ನನಗೆ ಏನು ಮಾಡಿದ್ದಾರೆ ಎಂಬುದು ವಿಜಯೇಂದ್ರ ಅವರಿಗೆ ಗೊತ್ತಿಲ್ಲವೇನೆಂದಲ್ಲ. ಬೇರೆ ಪಕ್ಷದವರ ಜೊತೆ ಕೈ ಜೋಡಿಸಿದವರು ಯಾರು ಎಂಬುದು ನಮ್ಮ ಅಧ್ಯಕ್ಷರಿಗೆ ಗೊತ್ತಿದೆ. ತಕ್ಷಣವೇ ಅಂಥವರ ಮೇಲೆ ಕ್ರಮ ಆಗಲೇಬೇಕು. ಪಕ್ಷಕ್ಕೆ ಮುಜುಗರವಾಗಬಾರದೆಂದು ನಾನು ಕೆಲವು ಕಹಿ ಸತ್ಯಗಳನ್ನು ನುಂಗಿಕೊಂಡಿದ್ದೇನೆ. ಎಲ್ಲಿಯವರೆಗೂ ನಾನು ಸಹಿಸಿಕೊಳ್ಳಲಿ ಎಂದು ಪ್ರಶ್ನೆ ಮಾಡಿದರು.
6
+ ಸೋಮಣ್ಣ ಎಂದಿಗೂ ನಂಬಿದವರಿಗೆ ಮೋಸ ಮಾಡಿದ ವ್ಯಕ್ತಿಯಲ್ಲ. ನಾನು ಕಳೆದ ನಾಲ್ಕು ದಶಕಗಳಿಂದ ರಾಜಕಾರಣದಲ್ಲಿ ಇದ್ದೇನೆ. ಪಕ್ಷ ಬದಲಾಯಿಸಿದರೂ ಅನಿವಾರ್ಯ ಕಾರಣಗಳಿಂದ ಪಕ್ಷ ಬದಲಾಯಿಸಿರಬಹುದು. ಆದರೆ ಸೋಮಣ್ಣ ಎಂದಿಗೂ ವಿಶ್ವಾಸ ದ್ರೋಹ ಮಾಡಿದ ವ್ಯಕ್ತಿಯಲ್ಲ. ನಮಗೆ ನಮ್ಮವರಿಂದಲೇ ಮೋಸವಾಗಿದೆ. ಅಂಥವರನ್ನು ಪಕ್ಷದಲ್ಲಿ ಇಟ್ಟುಕೊಳ್ಳಬೇಕೆ?ಇದನ್ನು ವರಿಷ್ಠರು ತೀರ್ಮಾನಮಾಡಬೇಕೆಂದು ಒತ್ತಾಯಿಸಿದರು.
7
+ ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ
8
+ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ನಾನು ಪಕ್ಷಕ್ಕೆ ಮುಜುಗರವಾಗಬಾರದೆಂದು ಯಾವುದೇ ಹೇಳಿಕೆಗಳನ್ನು ಕೊಟ್ಟಿಲ್ಲ. ನನಗಾಗಿರುವ ನೋವು ಯಾರಿಗೂ ಬರಬಾರದು. ಭವಿಷ್ಯದಲ್ಲಿ ಇದು ಮರುಕಳಿಸಬಾರದೆಂದರೆ ಕೆಲವರ ವಿರುದ್ಧ ಕ್ರಮ ಆಗಲೇಬೇಕು. ಪಕ್ಷದಲ್ಲಿದ್ದುಕೊಂಡೇ ನನಗೆ ಮೋಸ ���ಾಡುತ್ತಾರೆ ಎಂದರೆ ಯಾರನ್ನು ನಂಬಬೇಕೆಂದು ವಿಷಾದ ವ್ಯಕ್ತಪಡಿಸಿದರು.
9
+ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಬೇಕೆಂಬುದೇ ನಮ್ಮೆಲ್ಲರ ದೃಢಸಂಕಲ್ಪ, ಹಾಗಾಗಿ ನಾನು ಕೆಲವು ಕಹಿ ಸತ್ಯಗಳ ಅನುಭವವಾಗಿದ್ದರೂ ನುಂಗಿಕೊಂಡು ಹೋಗಿದ್ದೇನೆ. ಇದೇ ತಿಂಗಳ 16ರ ನಂತರ ಕೆಲವು ಬೆಳವಣಿಗೆಗಳ ಬಗ್ಗೆ ನಾನೇ ಮಾಹಿತಿ ಹಂಚಿಕೊಳ್ಳಲಿದ್ದೇನೆ ಎಂದು ಹೇಳಿದರು.
10
+ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ಬಿಜೆಪಿಗೆ ಪೂರಕವಾದ ವಾತಾವರಣವಿದೆ. ಎಷ್ಟು ಸಾಧ್ಯವೋ ಅಷ್ಟು ಸ್ಥಾನಗಳನ್ನು ಗೆಲ್ಲಲು ನಾವು ಶ್ರಮ ಹಾಕುತ್ತೇವೆ. ಪಕ್ಷವು ನನ್ನನ್ನು ಯಾವ ರೀತಿ ಬಳಸಿಕೊಳ್ಳುತ್ತದೆಯೋ ಗೊತ್ತಿಲ್ಲ. ಇದುವರೆಗೂ ಕೊಟ್ಟ ಜವಾಬ್ದಾರಿಯನ್ನು ಶ್ರದ್ದೆಯಿಂದ ಮಾಡಿದ್ದೇನೆ. ಮುಂದೆಯೂ ಸೋಮಣ್ಣನ ಅಗತ್ಯತೆ ಬೇಕೆಂದರೆ ಯಾವುದೇ ಕೆಲಸವನ್ನು ಶಿರಸಾ ವಹಿಸಿ ಮಾಡುತ್ತೇನೆ ಎಂದರು.
11
+ ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಬೇಕೆ ಬೇಡವೇ ಎಂಬುದನ್ನು ನಮ್ಮ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ನನಗೆ ಇಂಥದ್ದೇ ಕ್ಷೇತ್ರ ಬೇಕೆಂದು ಕೇಳುವ ವ್ಯಕ್ತಿಯಲ್ಲ. ವರಿಷ್ಠರು ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಬೇಡ ಎಂಬುದನ್ನು ಅಳೆದು ತೂಗಿ ತೀರ್ಮಾನಿಸುತ್ತಾರೆ. ವರಿಷ್ಠರು ಒಪ್ಪಿದರೆ ನಾನು ಅದಕ್ಕೂ ಸಿದ್ಧ ಕಾದು ನೋಡೋಣ ಏನಾಗುತ್ತದೆ ಎಂದು ಸೂಚ್ಯವಾಗಿ ಹೇಳಿದರು.
12
+ ಇದೇ ತಿಂಗಳ 8ರಂದು ನಾನು ದೆಹಲಿಗೆ ತೆರಳುತ್ತಿದ್ದೇನೆ. ಪಕ್ಷದ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ನಾನು ಯಾರ ವಿರುದ್ಧವೂ ದೂರು ನೀಡುವುದಿಲ್ಲ. ನನಗೆ ಯಾರಿಂದ ಅನ್ಯಾಯವಾಗಿದೆ ಎಂಬುದನ್ನು ಅವರ ಗಮನಕ್ಕೆ ತರುತ್ತೇನೆ. ನನ್ನ ನೋವನ್ನು ಪಕ್ಷದ ನಾಯಕರ ಜೊತೆ ಹಂಚಿಕೊಳ್ಳುವುದರಲ್ಲಿ ತಪ್ಪೇನಿದೆ? ಎಂದು ಅವರು ಪ್ರಶ್ನಿಸಿದರು.
13
+ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಭೇಟಿ ಕುರಿತಾಗಿ ಮಾತನಾಡಿದ ಸೋಮಣ್ಣ, ನನಗೆ ಅವರ ಭೇಟಿಯಿಂದ ಹೆಚ್ಚು ಶಕ್ತಿ ಬಂದಿದೆ. ರಾಜಕಾರಣದಲ್ಲಿ ಮುಂದುವರೆಯಬೇಕೆಂಬ ಇಚ್ಛೆ ಹೊಂದಿದ್ದೇನೆ. ಅವರಿಂದ ಮಾರ್ಗದರ್ಶನ ಪಡೆದಿರುವುದರಲ್ಲಿ ತಪ್ಪೇನಿಲ್ಲ ಎಂದು ಸಮರ್ಥಿಸಿಕೊಂಡರು.
14
+ ನನಗೆ ದೇವೇಗೌಡರು ರಾಜಕೀಯ ಗುರುಗಳು. 1983ರಿಂದಲೂ ನಾನು ಅವರನ್ನು ಬಲ್ಲೆ. ರಾಜಕಾರಣದಲ್ಲಿ ಏರೇಳಿತಗಳು ಉಂಟಾಗುವುದು ಸಹಜ. ಅದಕ್ಕೆ ಹೆಚ್ಚು ತಲೆಕೆಡಿಸಿಕೊಳ್ಳಬಾರದೆಂದು ಸಲಹೆ ಕೊಟ್ಟಿದ್ದಾರೆ. ನನಗೆ ಅವರ ಭೇಟಿ ಹೆಚ್ಚು ಬಲ ತಂದಿದೆ. ಅವರ ಮಾರ್ಗದರ್ಶನದಂತೆಯೇ ಮುಂದುವರೆಯುತ್ತೇನೆ ಎಂದು ಸೋಮಣ್ಣ ಹೇಳಿದರು.
15
+ ಪಡಿತರ ವಿತರಣೆ ಹಗರಣದಲ್ಲಿ ಟಿಎಂಸಿ ನಾಯಕ ಶಂಕರ್ ಅಧ್ಯಾ ಅರೆಸ್ಟ್
16
+ ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊಂಡು ಹೋಗುತ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.
17
+ ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಧ್ಯೆ ಯಾವ ಭಿನ್ನಾಭಿಪ್ರಾಯಗಳು ಇಲ್ಲ. ನಾನು ಮತ್ತು ಅಶೋಕ್ ಸ್ನೇಹಿತರು. ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾಂತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು ಎಂದರು.
eesanje/url_46_26_1.txt ADDED
@@ -0,0 +1,7 @@
 
 
 
 
 
 
 
 
1
+ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ಶೀಘ್ರದಲ್ಲೇ ತೀರ್ಮಾನ : ಸಿಎಂ
2
+
3
+ ಬೆಂಗಳೂರು,ಸೆ.4-ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.
4
+ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
5
+ ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು, 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ.
6
+ ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹ್ದುೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹ್ದುೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಠತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಮನವಿ ಸಲ್ಲಿಸಿತು.
7
+ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ ಮತ್ತಿತರರು ಉಪಸ್ಥಿತರಿದ್ದರು.
eesanje/url_46_26_10.txt ADDED
@@ -0,0 +1,7 @@
 
 
 
 
 
 
 
 
1
+ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ : ಆರ್.ಅಶೋಕ್ ವ್ಯಂಗ್ಯ
2
+
3
+ ಬೆಂಗಳೂರು,ಸೆ.3– ಕಾಂಗ್ರೆಸ್ ನೇತೃತ್ವದ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
4
+ ಈ ಕುರಿತು ತಮ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಸರ್ಕಾರದ ಪೋಸ್ಟ್ ಮಾಡಿರುವ ಅಶೋಕ್ ಅವರು, ಅಪನಂಬಿಕೆ ಸರ್ಕಾರದಿಂದ ನಂಬಿಕೆ ಯೋಜನೆ ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯವಷ್ಟೇ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆ ಎಂದು ಕುಹಕವಾಡಿದ್ದಾರೆ.
5
+ ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆಯೇ ಇಲ್ಲದಂತಾಗಿದೆ ಎಂದು ಅನುಮಾನ ಹೊರಹಾಕಿದ್ದಾರೆ.
6
+ ಬೆಂಗಳೂರಿನ ಜನತೆಗೆ ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ. ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ. ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ.
7
+ ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ.ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ. ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ ಎಂದು ಅಶೋಕ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
eesanje/url_46_26_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಚಾಮುಂಡಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸೂಕ್ತ ಕ್ರಮ : ಸಿಎಂ ಎಚ್ಚರಿಕೆ
2
+
3
+ ಮೈಸೂರು,ಸೆ.3-ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
4
+ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು.
5
+ ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ ಗುರಿಯಾಗಿದೆ ಎಂದರು. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು.
6
+ ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗಿಂದಾಗ್ಗೆತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ.
7
+ ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸುವುದಿಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.
8
+ ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
9
+ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.ಕೊಪ್ಪಳ ಹುಲಿಗಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದರು.
10
+ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರ��.
eesanje/url_46_26_12.txt ADDED
@@ -0,0 +1,5 @@
 
 
 
 
 
 
1
+ 402 ಪೊಲೀಸ್‌‍ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ
2
+ 402 22nd
3
+ ಬೆಂಗಳೂರು,ಸೆ.3-ಒಟ್ಟು 402 ಪೊಲೀಸ್‌‍ ಸಬ್‌ ಇನ್ಸ್‌ಪೆಕ್ಟರ್​ ಹುದ್ದೆಗಳಿಗೆ ಇದೇ ತಿಂಗಳ 22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ.
4
+ ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ನಿನ್ನೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
5
+ ಇದಲ್ಲದೆ ಗ್ರಾಮ ಆಡಳಿತಾಧಿಕಾರಿ ಹ್ದುೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್‌ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.
eesanje/url_46_26_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿಎಂ ರಾಜೀನಾಮೆ ದಿನ ಬಂದೇ ಬರುತ್ತೆ : ವಿಜಯೇಂದ್ರ ಭವಿಷ್ಯ
2
+ ' : '
3
+ ಬೆಂಗಳೂರು,ಸೆ.4-ಮುಡಾ ಪ್ರಕರಣದಲ್ಲಿ ಹಿಂದಿನ ಆಯುಕ್ತ ದಿನೇಶ್ಕುಮಾರ್ ಅಮಾನತಾಗಿರುವುದರಿಂದ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಆಯುಕ್ತರನ್ನು ಯಾವ ಕಾರಣಕ್ಕಾಗಿ ಅಮಾನತು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಒಬ್ಬ ಆಯುಕ್ತರೇ ಅಮಾನತುಗೊಂಡಿರುವುದರಿಂದ ಅಲ್ಲಿಗೆ ಹಗರಣ ನಡೆದಿದೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಿದೆ ಎಂದು ಹೇಳಿದರು. ಈ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲವೆಂದು ಸಿದ್ದರಾಮಯ್ಯನವರು ಹೇಳುತ್ತಿದ್ದರು.
5
+ ದಿನೇಶ್ಕುಮಾರ ಯಾವ ಕಾರಣಕ್ಕಾಗಿ ಅಮಾನತುಪಡಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಹೇಳಲಾಗಿದೆ. ಬರುವ ದಿನಗಳಲ್ಲಿ ಸಿಎಂ ರಾಜೀನಾಮೆ ನೀಡುವುದು ಶತ ಸಿದ್ಧ, ಕಾದು ನೋಡಿ ಎಂದು ಸೂಚ್ಯವಾಗಿ ಹೇಳಿದರು.
6
+ ಮೇಲನೆ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ದೂರು ನೀಡಿರುವ ವಿಚಾರ ಕುರಿತು ಸಿಡಿಮಿಡಿಗೊಂಡ ವಿಜಯೇಂದ್ರ, ನಾನು ಸಚಿವ ಪ್ರಿಯಾಂಕ ಖರ್ಗೆಯವರಿಗೆ ಒಂದು ಪ್ರಶ್ನೆ ಕೇಳುತ್ತೇನೆ.
7
+ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ದೂರು ಕೊಡಲು ಹೋದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಉಳಿದ ಸಚಿವರು ಏಕೆ ಇರಲಿಲ್ಲ?, ರಾಜಭವನದಲ್ಲಿ ಯಾರಾದರೂ ಹಿರಿಯ ನಾಯಕರು ಇದ್ದಾರಾ? ಎಂದು ಪ್ರಶ್ನಿಸಿದರು.
8
+ ಕಾಂಗ್ರೆಸ್ನವರು ಬಿಜೆಪಿ ಮೇಲೆ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಬಿಜೆಪಿ ಮನೆಯೊಂದು, ಮೂರು ಬಾಗಿಲು ಎನ್ನುವವರು ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಬಂದ ಮೇಲೆ ಎಷ್ಟು ಬಾಗಿಲುಗಳು ಇರುತ್ತವೆ ಎಂದು ಕಾದು ನೋಡಿ ಎಂದು ತಿರುಗೇಟು ನೀಡಿದರು.
9
+ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರವಾಗಿ ನಮ ಪಕ್ಷದ ಮುಖಂಡರು ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಯೋಗೀಶ್ವರ್ ಅಭ್ಯರ್ಥಿಯಾಗಬೇಕೆಂಬುದು ಬಹುತೇಕರ ಒತ್ತಾಸೆಯಾಗಿದೆ. ಅಂತಿಮವಾಗಿ ಪಕ್ಷ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಕಾದು ನೋಡೋಣ ಎಂದರು.
10
+ ನಾವು ಈ ಹಿಂದೆಯೇ ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಹಲವಾರು ಬಾರಿ ಮನವಿ ಮಾಡಿಕೊಂಡರೂ ಸರ್ಕಾರ ನಮ ಮಾತು ಕೇಳಲಿಲ್ಲ. ಯಾರೋ ಒಬ್ಬ ಅಯೋಗ್ಯ ಮಾಡಿದ ತಪ್ಪಿಗೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ. ಇದಕ್ಕೆ ಕಾರಣರಾದವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು.
11
+ ಕೋವಿಡ್ ಮಧ್ಯಂತರದ ವರದಿ ಕುರಿತು ನಾವು ವಾಲೀಕಿ, ಮುಡಾ ಹಗರಣ ಹೊರತರುತ್ತಿದ್ದಂತೆ ಕಾಂಗ್ರೆಸ್ನವರು ಬೆಚ್ಚಿ ಬಿದ್ದಿದ್ದಾರೆ. ಅಂತಿಮವಾಗಿ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಏನು ತೀರ್ಮಾನ ಮಾಡುತ್ತಾರೋ ಮಾಡಲಿ, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಅಂದಿನ ಆರೋಗ್ಯ ಸಚಿವ ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ನಮ ಸರ್ಕಾರದ ಅವಧಿಯಲ್ಲಿ ಯಾವುದೇ ತಪ್ಪುಗಳು ಅಥವಾ ಹಗರಣಗಳು ನಡೆದಿಲ್ಲ. ವರದಿಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಊಹಾಪೋಹದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
12
+ ಯುಪಿಎಸ್ಸಿ ಮತ್ತು ಪಿಎಸ್ಐ ಪರೀಕ್ಷೆ ಒಂದೇ ದಿನ ನಡೆಯುತ್ತಿರುವುದರ ಬಗ್ಗೆ ನಾವು ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇವೆ. ಸರ್ಕಾರ ಒಂದು ಕಡೆ ಪರೀಕ್ಷೆ ಮುಂದೂಡುತ್ತದೆ, ಮತ್ತೊಂದು ಕಡೆ ನಡೆದಿರುವ ಪರೀಕ್ಷೆಯಲ್ಲಿ ಅದ್ವಾನಗಳನ್ನು ಸೃಷ್ಟಿಸುತ್ತದೆ. ಒಂದು ವರ್ಷದ ಹಿಂದೆಯೇ ಪಿಎಸ್ಐ ಪರೀಕ್ಷೆ ನಿಗಧಿಯಾಗಿದೆ. ಅದೇ ದಿನಾಂಕದಂದು ಯುಪಿಎಸ್ಸಿ ಪರೀಕ್ಷೆ ನಡೆಯುತ್ತಿದೆ. ಸರ್ಕಾರ ಏಕೆ ಇಂತಹ ಮೂರ್ಖ ನಿರ್ಧಾರ ಮಾಡುತ್ತಿದೆ ಎಂದು ಪ್ರಶ್ನಿಸಿದರು.
eesanje/url_46_26_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಒಟ್ಟು 231 ಸಾಕ್ಷಿದಾರರನ್ನೊಳಗೊಂಡ ವಾಟರ್ ಟೈಟ್ ಚಾರ್ಜ್ ಶೀಟ್ : ದಯಾನಂದ
2
+ 231 :
3
+ ಬೆಂಗಳೂರು, ಸೆ.4– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಸಂಪೂರ್ಣ ಮುಗಿದಿದ್ದು, ಇಂದು ನ್ಯಾಯಾಲಯಕ್ಕೆ ವಾಟರ್ ಟೈಟ್ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆದಿದೆ. ಸಾಕಷ್ಟು ತಾಂತ್ರಿಕ ಸಾಕ್ಷ್ಯಗಳು ದೊರೆತಿದ್ದು, ಅದನ್ನು ತನಿಖೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ವೈದ್ಯರು, ಎಂಜಿನಿಯರ್, ಆರ್ಟಿಓಗಳು, ತಹಸೀಲ್ದಾರರು ಹಾಗೂ 56 ಪೊಲೀಸರನ್ನು ಸಾಕ್ಷಿಯನ್ನಾಗಿ ಮಾಡಲಾಗಿದೆ. ಒಟ್ಟು 231 ಒಟ್ಟು ಸಾಕ್ಷಿದಾರರನ್ನು ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದರು.
5
+ ಪ್ರಕರಣ ಸಂಬಂಧ ಈಗಾಗಲೇ 17 ಮಂದಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಎಫ್ಎಸ್ಎಲ್ನಿಂದ ಎಲ್ಲಾ ವರದಿಗಳು ಬಂದಿವೆ. ತಾಂತ್ರಿಕ ವಿಶ್ಲೇಷಣೆಗಾಗಿ ಕೆಲವು ಎಲೆಕ್ಟ್ರಾನಿಕ್ ಸಲಕರಣೆಗಳನ್ನು ಹೈದರಾಬಾದ್ನ ಸಿಎಫ್ಎಸ್ಎಲ್ ಕಳುಹಿಸಲಾಗಿತ್ತು. ಅಲ್ಲಿನ ವರದಿ ಭಾಗಶಃ ಬಂದಿದ್ದು, ಸಂಪೂರ್ಣ ಬಂದಿರಲಿಲ್ಲ, ಲಭ್ಯ ಇರುವ ಮಾಹಿತಿ ಆಧರಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
6
+ ನ್ಯಾಯಾಲಯದಲ್ಲಿ ಈ ಪ್ರಕರಣದ ಬಗ್ಗೆ ಸರ್ಕಾರದ ಪರವಾಗಿ ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಲಾಗಿದೆ. ಅವರ ಅಣತಿಯಂತೆ ದೋಷಾರೋಪಣ ಪಟ್ಟಿ ಸಿದ್ಧಪಡಿಸಲಾಗಿದೆ. ಸಾಮಾಜಿಕ ಜಾಲತಾಣದಿಂದಲೂ ಸಾಕಷ್ಟು ತಾಂತ್ರಿಕ ಸಾಕ್ಷ್ಯಗಳು ಲಭ್ಯವಾಗಿದ್ದು, ಅವನ್ನು ತನಿಖೆಯಲ್ಲಿ ಬಳಸಿಕೊಳ್ಳಲಾಗಿದೆ.
7
+ ತನಿಖೆ ಉತ್ತಮವಾಗಿ ನಡೆದಿದೆ, ಎಲ್ಲ ರೀತಿಯ ಸಾಕ್ಷ್ಯ ಆಧಾರಗಳನ್ನು ಬಳಸಿಕೊಂಡು ಆರೋಪಿಗಳು ನುಣಚಿಕೊಳ್ಳಲು ಅವಕಾಶವೇ ಇಲ್ಲದಂತೆ ವಾಟರ್ಟೈಟ್ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಇದಾದ ಬಳಿಕ ತ್ವರಿತ ವಿಲೇವಾರಿ ಅಥವಾ ವಿಶೇಷ ನ್ಯಾಯಾಲಯದ ವಿಚಾರಣೆಗೆ ಮನವಿ ಸಲ್ಲಿಸುವ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು.
8
+ ರೇಣುಕಾಸ್ವಾಮಿಯ ಅಪಹರಣ, ಹಲ್ಲೆ, ಕೊಲೆ ಹಾಗೂ ಈ ಕೇಸ್ ಮುಚ್ಚಿ ಹಾಕಲು ಹಣ ನೀಡಿದ್ದು, ಈ ಪ್ರಕರಣದಲ್ಲಿ ದರ್ಶನ್ ಪಾತ್ರದ ಇಂಚಿಂಚೂ ಮಾಹಿತಿಯನ್ನು ಸಂಗ್ರಹಿಸಿ ಚಾರ್ಜ್ಶೀಟ್ನಲ್ಲಿ ದಾಖಲಿಸಲಾಗಿದೆ ಎಂದರು.
9
+ ಪಟ್ಟಣಗೆರೆ ಶೆಡ್ನಲ್ಲಿ ದರ್ಶನ್ ಓಡಾಟದ ದೃಶ್ಯಗಳು, ತಹಸೀಲ್ದಾರ್ ಸ್ಥಳ ಮಹಜರು ಮಾಡಿರುವ ಮಾಹಿತಿಗಳು, ಶವ ಸಾಗಿಸಿರುವ ವಾಹನ, ಪಂಚನಾಮೆ ವೇಳೆಯಲ್ಲಿ ಲಭ್ಯವಾಗಿರುವ ಸಾಕ್ಷ್ಯಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.
eesanje/url_46_26_4.txt ADDED
@@ -0,0 +1,9 @@
 
 
 
 
 
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣ : 3991 ಪುಟಗಳ ಚಾರ್ಜ್‌ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಕೆ
2
+ : 3991
3
+ ಬೆಂಗಳೂರು, ಸೆ.4-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಚಂದನ್‌ ನೇತೃತ್ವದಲ್ಲಿ ಇಂದು 24ನೆ ಎಸಿಎಂಎಂ ನ್ಯಾಯಾಲಯಕ್ಕೆ 3991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.
4
+ ಈ ದೋಷಾರೋಪಣ ಪಟ್ಟಿ ಒಟ್ಟು 231 ಸಾಕ್ಷ್ಯಾಧಾರಗಳ ನ್ನೊಳಗೊಂಡಂತೆ ಒಟ್ಟು 291 ಪುಟಗಳ 3991 ಪುಟಗಳುಳ್ಳ ಏಳು ಸಂಪುಟಗಳ 10 ಕಡತಗಳನ್ನು ಒಳಗೊಂಡಿರುತ್ತದೆ.ಪವಿತ್ರಾಗೌಡ ಎ1 ಮತ್ತು ದರ್ಶನ್‌ ಎ2 ಆರೋಪಿಗಳಾಗಿದ್ದು, ಒಟ್ಟು 17 ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.
5
+ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿ ಈವರೆಗೆ ಒಟ್ಟು 17 ಜನರನ್ನು ಬಂಧಿಸಿ ಅವರ ವಿಚಾರಣೆ ನಡೆಸಿ ಮತ್ತು ತನಿಖೆ ವೇಳೆ ಸಂಗ್ರಹಿಸಿದ್ದ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.ಈ ಚಾರ್ಜ್‌ಶೀಟ್‌ನಲ್ಲಿ ದರ್ಶನ್‌ ಗ್ಯಾಂಗ್‌ ವಿರುದ್ಧ ಕೊಲೆ, ಅಪಹರಣ, ಒಳಸಂಚು, ಸಾಕ್ಷ್ಯನಾಶ ಸೇರಿದಂತೆ ಹಲವು ಗಂಭೀರ ಅಪರಾಧಗಳನ್ನು ಉಲ್ಲೇಖಿಸಲಾಗಿದೆ.
6
+ ಈ ಪ್ರಕರಣದಲ್ಲಿ ಮೂವರು ಪ್ರತ್ಯಕ್ಷ ಸಾಕ್ಷಿದಾರರು, ಎಂಟು ಎಫ್‌ಎಸ್‌‍ಎಲ್‌/ಸಿಎಫ್‌ಎಸ್‌‍ಎಲ್‌ನಿಂದ 8, 161 ಮತ್ತು 164ರ ಸಿಆರ್‌ಪಿ ಅಡಿಯಲ್ಲಿ ಒಟ್ಟು 97 ಸಾಕ್ಷಿಗಳು, 59 ಪಂಚರು, 8 ಮಂದಿ ಸರ್ಕಾರಿ ಅಧಿಕಾರಿಗಳಾದ ತಹಸೀಲ್ದಾರ್‌, ವೈದ್ಯರು, ಆರ್‌ಟಿಒ, ಎಂಜಿನಿಯರ್‌ಗಳು, 56 ಮಂದಿ ಪೊಲೀಸರು ಸೇರಿದಂತೆ ಒಟ್ಟು 231 ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.
7
+ ಇದರಲ್ಲಿ ಪ್ರಮುಖವಾಗಿ 164 ಸಿಆರ್‌ಪಿಸಿ ಅಡಿಯಲ್ಲಿ ಹೇಳಿಕೆಗಳನ್ನು ಪಡೆಯಲಾಗಿದ್ದು, ಹಲವು ಛಾಯಾಚಿತ್ರಗಳು, ದರ್ಶನ್‌ ತೊಟ್ಟಿದ್ದ ಬಟ್ಟೆಗಳು, ಪವಿತ್ರಾ ಅವರ ಚಪ್ಪಲಿ ಸೇರಿದಂತೆ ಹಲವು ವಸ್ತುಗಳನ್ನು ಕೂಡ ಸಂಗ್ರಹಿಸಲಾಗಿದೆ.
8
+ ಪ್ರಮುಖವಾಗಿ ರೇಣುಕಾಸ್ವಾಮಿಯನ್ನು ಶೆಡ್‌ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡುವಾಗ ದರ್ಶನ್‌ ಅವರು ಅಲ್ಲಿದ್ದರು ಎಂಬ ಬಗ್ಗೆ ಕೆಲವೊಂದು ವಿಡಿಯೋ ಸಾಕ್ಷ್ಯಗಳನ್ನು ಕೂಡ ಸಂಗ್ರಹಿಸಿ ಚಾರ್ಜ್‌ಶೀಟ್‌ನಲ್ಲಿ ಈ ಎಲ್ಲ ಅಂಶಗಳನ್ನು ಸಲ್ಲಿಸಲಾಗಿದೆ.
9
+ ಈ ಪ್ರಕರಣದ ತನಿಖೆಯನ್ನು ಪೊಲೀಸ್‌‍ ಕಮಿಷನರ್‌ ದಯಾನಂದ, ಹೆಚ್ಚುವರಿ ಪೊಲೀಸ್‌‍ ಕಮಿಷನರ್‌ ಸತೀಶ್‌ಕುಮಾರ್‌, ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್‌ ಅವರ ಮಾರ್ಗದರ್ಶನದಲ್ಲಿ ವಿಜಯನಗರ ಉಪವಿಭಾಗದ ಎಸಿಪಿ ಚಂದನ್‌ಕುಮಾರ್‌ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದೆ.
eesanje/url_46_26_5.txt ADDED
@@ -0,0 +1,6 @@
 
 
 
 
 
 
 
1
+ ದರ್ಶನ್‌ ತಪ್ಪು ಮಾಡಿ ಜೈಲಿಗೆ ಹೋಗಿದ್ದಾರೆ : ಜಮೀರ್
2
+ '
3
+ ಹಾವೇರಿ,ಸೆ.3-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತಪ್ಪು ಮಾಡಿದ ಕಾರಣಕ್ಕಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ನನ್ನ ಹೆಸರನ್ನು ಏಕೆ ಥಳಕು ಹಾಕಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ ಆಕ್ಷೇಪ ವ್ಯಕ್ತಪಡಿಸಿದರು.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್‌ ನನ್ನ ಆತೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದರು.
5
+ ಜಮೀರ್‌ ಅಹಮದ್‌ ಖಾನ್‌ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವುದರಿಂದ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂಬ ವ್ಯಾಖ್ಯಾನಗಳಿವೆ. ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ದರ್ಶನ್‌ ರೌಡಿಶೀಟರ್‌ಗಳ ಜೊತೆ ಸೇರಿ ರಾಜಾತಿಥ್ಯ ಪಡೆದುಕೊಂಡು ಫೋಟೊಗಳು ವೈರಲ್‌ ಆಗಿದ್ದವು.
6
+ ಈ ಹಿನ್ನೆಲೆಯಲ್ಲಿ ದರ್ಶನ್‌ರನ್ನು ಬೆಳಗಾವಿ ಅಥವಾ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಚರ್ಚೆಗಳು ನಡೆದಾಗ ಅಂತಿಮವಾಗಿ ಬಳ್ಳಾರಿಗೆ ಸ್ಥಳಾಂತರಿಸಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಮೀರ್‌, ನನಗೂ, ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುವ ಜೊತೆಗೆ ತಪ್ಪು ಮಾಡಿರುವುದಕ್ಕೆ ಜೈಲಿಗೆ ಹೋಗಿದ್ದಾರೆ, ಸುಮನೇ ಯಾರೂ ಬಂಧನಕ್ಕೊಳಗಾಗುವುದಿಲ್ಲ ಎಂದು ಪುನರುಚ್ಚರಿಸಿದರು.
eesanje/url_46_26_6.txt ADDED
@@ -0,0 +1,7 @@
 
 
 
 
 
 
 
 
1
+ ಕಸ್ತೂರಿ ರಂಗನ್‌ ವರದಿಗೆ ತೀವ್ರ ಆಕ್ಷೇಪ : ಮಲೆನಾಡು ಭಾಗದಲ್ಲಿ ಜನಜಾಗೃತಿ
2
+ '
3
+ ಚಿಕ್ಕಮಗಳೂರು, ಸೆ.3-ಕಸ್ತೂರಿ ರಂಗನ್‌ ವರದಿ ಆಧರಿಸಿ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ಸಂಬಂಧ 6ನೇ ಕರಡು ಅಧಿಸೂಚನೆಗೆ ತೀವ್ರ ಆಕ್ಷೇಪಣೆಗಳು ವ್ಯಕ್ತವಾಗಿವೆ.
4
+ 13 ಆಕ್ಷೇಪಣೆಗಳಿಗೆ ಸಂಬಂಧಿಸಿ ದಂತೆ ಮಲೆನಾಡು ಜಿಲ್ಲಾ ವ್ಯಾಪ್ತಿಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಈವರೆಗಿನ ಸಂಬಂಧ ಮನೆಮನೆಗಳಿಗೆ ಅಧಿಸೂಚನೆಯ ಆಕ್ಷೇಪಣೆಗಳನ್ನು ತಲುಪಿಸಿ ಜಾಗೃತಿ ಮೂಡಿಸಲಾಗುತ್ತಿದೆ.
5
+ ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರಧಾನ ಸಂಚಾಲಕರಾದ ಅನಿಲ್‌ ಹೊಸಕೊಪ್ಪ, ಪ್ರಧಾನ ಕಾರ್ಯದರ್ಶಿಯಾದ ಸುಧೀರ್‌ ಕುಮಾರ್‌ ಮುರೋಳ್ಳಿ ಅವರು ಅವೈಜ್ಞಾನಿಕ ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸಿ ಸ್ಥಳೀಯ ಜನಪ್ರತಿನಿಧಿಗಳನ್ನು ಒಳಗೊಂಡ ಹೊಸ ಪರಿಣಿತಿ ತಂಡವನ್ನು ನೇಮಿಸಿ ವರದಿಯನ್ನು ಅಮೂಲಾಗ್ರವಾಗಿ ಪರಿಶೀಲಿಸಬೇಕೆಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾದ ಭೂಪೇಂದ್ರ ಯಾದವ್‌ ಮತ್ತು ಅರಣ್ಯ ಇಲಾಖೆ ಕಾರ್ಯದರ್ಶಿಯವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.
6
+ ವರದಿಗೆ ಸಂಬಂಧಿಸಿದಂತೆ ಕೆಳಕಂಡ ಆಕ್ಷೇಪಣೆಗಳನ್ನು ಉಲ್ಲೇಖಿಸಿದ್ದಾರೆ.*ಕಸ್ತೂರಿ ರಂಗನ್‌ ವರದಿಯು ತೀವ್ರ ಅವೈಜ್ಞಾನಿಕವಾಗಿದ್ದು, ಸೆಟಲೈಟ್‌ ಚಿತ್ರಣದ ಆಧಾರದ ಮೇಲೆ ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ವ್ಯತಿರಿಕ್ತವಾಗಿದೆ. ಸದರಿ ಸಮಿತಿಯು ಈ ಭಾಗಕ್ಕೆ ಭೇಟಿ ಕೊಡದೇ ವಾಸ್ತವ ಚಿತ್ರಣವನ್ನು ಅರಿಯದೇ ನೀಡಿದ ವರದಿಯಾಗಿರುತ್ತದೆ.*ಈ ಭಾಗದ ಗ್ರಾಮಗಳ ಶೇ.20 ಕ್ಕಿಂತ ಹೆಚ್ಚು ಭೌಗೋಳಿಕ ಪ್ರದೇಶವನ್ನು ಜೀವವೈವಿಧ್ಯ ಪರಿಸರ ಸೂಕ್ಷ್ಮ ಪ್ರದೇಶವನ್ನಾಗಿ ಸೇರಿಸಲ್ಪಟ್ಟಿದೆ. ಇದು ಅವೈಜ್ಞಾನಿಕವಾಗಿರುತ್ತದೆ.*ಘೋಷಿಸಿದ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಗ್ರಾಮ ಮಟ್ಟದ ಜನಾಭಿಪ್ರಾಯ ಅಥವಾ ಭೌತಿಕ ಸರ್ವೇ ಮಾಡಿ ವಿಷಯ ಸಂಗ್ರಹ ಮಾಡಿರುವುದಿಲ್ಲ.*ಪಶ್ಚಿಮ ಘಟ್ಟ ಪ್ರದೇಶವನ್ನು ರಕ್ಷಣೆ ಹಾಗೂ ಸಂರಕ್ಷಿಸಲು ಅಸ್ತಿತ್ವದಲ್ಲಿರುವ ಕಾನೂನು, ನೀತಿ-ನಿಯಮ ಇರುವುದರಿಂದ ಹೊಸಮಾನದಂಡದ ಅವಶ್ಯಕತೆ ಇರುವುದಿಲ್ಲ.
7
+ *ಸೂಕ್ಷ್ಮ ಪ್ರದೇಶ ಘೋಷಿಸಿರುವುದರಿಂದ ಗ್ರಾಮಸ್ಥರ ಮತ್ತು ಅರಣ್ಯವಾಸಿಗಳ ಜೀವನ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಆಗುವುದನ್ನು ಅವಲೋಕನ ತೆಗೆದುಕೊಂಡದ್ದು ಇರುವುದಿಲ್ಲ.*ಈ ಭಾಗದ ಅಭಿವೃದ್ಧಿ ದಿಶೆಯಲ್ಲಿ ಪರಿಸರ ಸೂಕ್ಷ್ಮ ಘೋಷಣೆಯಿಂದ ಅಭಿವೃದ್ಧಿಗೆ ಮಾರಕವಾಗುವುದು. ಅಲ್ಲದೇ, ನೈಸರ್ಗಿಕ ಮತ್ತು ಮೂಲಭೂತ ಸೌಕರ್ಯದಿಂದ ವಂಚಿತವಾಗುತ್ತದೆ.*ಉಪಗ್ರಹ ಆಧಾರಿತ ಸರ್ವೇ ಆಗಿರುವುದರಿಂದ ಅಡಿಕೆ, ತೆಂಗಿನ ತೋಟ, ಕಾಫಿ, ರಬ್ಬರ್‌ ಹಾಗೂ ಇನ್ನಿತರ ಕೃಷಿ ತೋಟಗಾರಿಕೆ ಬೆಳೆಗಳಿಂದ ಹಸಿರು ಪ್ರದೇಶವನ್ನು ಸಹಿತ ಅರಣ್ಯ ಪ್ರದೇಶವೆಂದು ಪರಿಗಣಿಸಿರುವುದು ನೈಸರ್ಗಿಕ ವಿರೋಧವಾದ ಕ್ರಮ.*ಘೋಷಿಸಲ್ಪಟ್ಟ ಸೂಕ್ಷ್ಮ ಪ್ರದೇಶದಲ್ಲಿ ಹಸಿರುಕರಣದ ಪ್ರದೇಶದಿಂದ ಖಾಸಗಿ ಮತ್ತು ಅರಣ್ಯವಾಸಿಗಳ ತೋಟಗಾರಿಕೆ ಕೃಷಿ ಚಟುವಟಿಕೆಯ ಹಸಿರುಕರಣ ಪ್ರದೇಶವನ್ನು ಭೌತಿಕ ಸರ್ವೇ ಮೂಲಕ ನೈಸರ್ಗಿಕ ಅರಣ್ಯ ಗಡಿ ಗುರುತಿಸಿರುವುದಿಲ್ಲ.*ಘೋಷಿಸಿದ ಹಳ್ಳಿ(ಗ್ರಾಮದ) ನಿರ್ದಿಷ್ಠ ಸರ್ವೇ ನಂಬರ್‌ ಪ್ರದೇಶ ವ್ಯಾಖ್ಯಾನಿಸದೇ ಇರುವುದು ಅವೈಜ್ಞಾನಿಕ.*ಘೋಷಿಸಿದ ಪ್ರದೇಶದಲ್ಲಿ ನೈಸರ್ಗಿಕ ಮತ್ತು ಮಾನವ ಮೂಲ ಸೌಕರ್ಯದ ಮೂಲಭೂತ ಹಕ್ಕುಗಳಾದ ನೀರು, ರಸ್ತೆ ಅಭಿವೃದ್ಧಿ ಮುಂತಾದ ಹಲವಾರು ಪಾರಂಪರಿಕ ನಾಗರಿಕತೆಯ ಸೌಕರ್ಯ ಅವನತಿಗೆ ಕಾರ್ಯ ನಿರ್ಬಂಧನದಿಂದ ಮಾನವ ಹಕ್ಕುಗಳ ಜೀವನ ಹಕ್ಕು ಉಲ್ಲಂಘನೆ ಆಗುವುದು.*ವರದಿಯು ಕೃಷಿ ಹಾಗೂ ತೋಟಗಾರಿಕೆ ಆಧಾರಿತ ಉದ್ಯಮಗಳ ಅಸ್ತಿತ್ವನ್ನು ನಿರ್ಲಕ್ಷಿಸಿದೆ.*ಈ ಹಿಂದಿನ ಕರಡು ಅಧಿಸೂಚನೆಗೆ ರಾಜ್ಯಗಳು ಸಲ್ಲಿಸಿದ ತಕರಾರು ಮತ್ತು ಸಲಹೆಗಳ ಬಗ್ಗೆ ಪುನರ್‌ ಪರಿಶೀಲಿಸಲು ನಿವೃತ್ತ ಐ.ಎ.ಎಸ್‌‍. ಅಧಿಕಾರಿ ಸಂಜಯ್‌ ಕುಮಾರ್‌ ನೇತೃತ್ವದ ಸಮಿತಿಯು ಈ ಭಾಗದ ಯಾವುದೇ ಹಳ್ಳಿ ಪ್ರದೇಶಗಳಿಗೆ ಭೇಟಿ ಕೊಟ್ಟು ವಾಸ್ತವಿಕತೆಯನ್ನು ಅರಿತಿರುವುದಿಲ್ಲ ಎಂದು ತಮ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ.
eesanje/url_46_26_7.txt ADDED
@@ -0,0 +1,8 @@
 
 
 
 
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾರ್ಜ್ ಶೀಟ್ ನಾಳೆ ನ್ಯಾಯಾಲಯಕ್ಕೆ ಸಲ್ಲಿಕೆ
2
+
3
+ ಬೆಂಗಳೂರು, ಸೆ.3-ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಬಹುತೇಕ ಪೂರ್ಣವಾಗಿದ್ದು, ಇಂದು ಅಥವಾ ನಾಳೆಯೊಳಗೆ ಚಾರ್ಜ್ಶೀಟ್ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದೆಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದ್ದಾರೆ.
4
+ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಸಾಕ್ಷ್ಯಾಧಾರಗಳನ್ನು ಆಧರಿಸಿ ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿದ್ದು, ಅದನ್ನು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಎಸ್ಪಿ) ಪರಿಶೀಲನೆ ನಡೆಸಿದ್ದು,ಕೆಲವೊಂದು ವಿಷಯಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಅದಕ್ಕೂ ನಾವು ಉತ್ತರ ಸಿದ್ಧಪಡಿಸಿದ್ದೇವೆ.
5
+ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಸಾಕ್ಷ್ಯಾಧಾರಗಳುಚಸಿಕ್ಕಿದ್ದು, ಅದರ ಪೂರ್ಣ ವಿವರ ಒಳಗೊಂಡಿರುವ ಚಾರ್ಜ್ಶೀಟ್ಅನ್ನು ಇನ್ನೆರಡು ದಿನಗಳೊಳಗೆ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು. ಬೆಂಗಳೂರಿನ ವಿಧಿ-ವಿಜ್ಞಾನ ಪ್ರಯೋಗಾಲಯದಿಂದ ಎಲ್ಲಾ ವರದಿಗಳು ಬಂದಿದ್ದು, ಜೊತೆಗೆ ಅದಕ್ಕೆ ಸೇರಿದ ಪೂರಕ ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸಲಾಗಿದೆ.
6
+ ಹೈದರಾಬಾದ್ನ ಎಫ್ಎಸ್ಎಲ್ನಿಂದ ಕೆಲ ವರದಿಗಳು ಬರುವುದು ಬಾಕಿ ಇದೆ. ಆದರೂ ಸಹ ಅದರ ತನಿಖೆ ಬಾಕಿ ಇಟ್ಟು ನಾವು ಮುಂದುವರೆಯುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.ಆರೋಪಿಗಳಿಗೆ ಯಾವ ಸೆಕ್ಷನ್ನಡಿ ಶಿಕ್ಷೆಯಾಗಬಹುದು ಎಂಬುದನ್ನು ಸಾಕ್ಷಿ ಆಧಾರಗಳ ಮೇಲೆ ನಿರ್ಧಾರವಾಗುತ್ತದೆ ಎಂದು ಆಯುಕ್ತರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
7
+ ವೈರಲ್ ಆದ ೇಟೋದೊಳಗೆ ನಟ ದರ್ಶನ್ ಜೊತೆ ಇದ್ದ ವಿಲ್ಸನ್ ಗಾರ್ಡನ್ ನಾಗ ಮತ್ತು ಇತರರ ಬಗ್ಗೆ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ಸ್ಥಳಾಂತರ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ.
8
+ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಪ್ರಕರಣ ದಾಖಲಿಸಿದ ಮಹಿಳೆಯ ಸಾವು ಕುರಿತಂತೆ ಮಹಿಳೆ ಆಯೋಗವು ಬರೆದಿರುವ ಪತ್ರ ನಮಗೆ ಇನ್ನು ತಲುಪಿಲ್ಲ ಪತ್ರ ಬಂದ ನಂತರ ಅದನ್ನು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ದಯಾನಂದ ಅವರು ತಿಳಿಸಿದರು.
eesanje/url_46_26_8.txt ADDED
@@ -0,0 +1,6 @@
 
 
 
 
 
 
 
1
+ ದೂರು ಕೊಡಲು ಬಂದವರೊಂದಿಗೆ ಸಂಯಮದಿಂದ ವರ್ತಿಸಿಸುವಂತೆ ಪೊಲೀಸರಿಗೆ ಗೃಹಸಚಿವರ ತಾಕೀತು
2
+
3
+ ಬೆಂಗಳೂರು,ಸೆ.3-ಅರ್ಜಿ ಕೊಡಲು ಅಥವಾ ದೂರು ದುಮಾನ ಹೇಳಿಕೊಳ್ಳಲು ಬರುವವರೊಂದಿಗೆ ಒರಟಾಗಿ ನಡೆದುಕೊಳ್ಳದಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಪೊಲೀಸ್ ಅಧಿಕಾರಿ ಗಳಿಗೆ ತಾಕೀತು ಮಾಡಿದರು.
4
+ ಇಂದು ಬೆಳಿಗ್ಗೆ ಪರಮೇಶ್ವರ್ ಅವರ ನಿವಾಸದೆದುರು ಆಗಮಿಸಿದ ಪಿಎಎಸ್ಐ ಹುದ್ದೆಯ ಆಕಾಂಕ್ಷಿಗಳು ಹಾಗೂ ಪೊಲೀಸ್ ಪೇದೆ ಹುದ್ದೆ ನೇಮಕಾತಿಗೆ ವಯೋಮಿತಿ ಸಡಿಲಿಕೆಗೆ ಮನವಿ ಸಲ್ಲಿಸಲು ಆಗಮಿಸಿದವರನ್ನು ಕೆಲವು ಪೊಲೀಸ್ ಅಧಿಕಾರಿಗಳು ಬಲವಂತವಾಗಿ ವಶಕ್ಕೆ ಪಡೆದು ಕರೆದೊಯ್ದರು. ಈ ವೇಳೆ ಕೆಲವರ ಮೇಲೆ ಹಲ್ಲೆ ನಡೆಸಿದ್ದೂ ಕಂಡುಬಂದಿತು.
5
+ ಈ ಕುರಿತು ಮಾಧ್ಯಮದವರು ಖಾರವಾಗ ಪ್ರಶ್ನಿಸಿದಾಗ ಗೃಹಸಚಿವರು ತಬ್ಬಿಬ್ಬಾದರು. ಯಾವುದೇ ಅರ್ಜಿಗಳನ್ನು ನೀಡಲು ಬಂದವರೊಂದಿಗೆ ನಾನೇ ಮಾತನಾಡುತ್ತೇನೆ, ಅರ್ಜಿಗಳನ್ನು ಪಡೆದುಕೊಂಡು ಸಮಯವಿದ್ದರೆ ಅದರ ಮೇಲೆ ಸೂಕ್ತ ನಿರ್ದೇಶನಗಳನ್ನು ಬರೆದು ರವಾನೆ ಮಾಡುತ್ತೇನೆ. ಸಮಯ ಇಲ್ಲದೇ ಇದ್ದರೆ ಅರ್ಜಿ ಪಡೆದು ನಂತರ ಪರಿಶೀಲಿಸಲಾಗುವುದು ಎಂದು ಹೇಳಿದರು.
6
+ ಇಂದು ಬೆಳಗಿನ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ. ಇನ್ನು ಮುಂದೆ ಅರ್ಜಿಗಳನ್ನು ನೀಡಲು ಬಂದವರೊಂದಿಗೆ ಯಾರೂ ಅನುಚಿತವಾಗಿ ವರ್ತಿಸಬಾರದು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
eesanje/url_46_26_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಕೋವಿಡ್ ಹಗರಣ : ಗುರುವಾರ ಸಂಪುಟ ಸಭೆಯಲ್ಲಿ ವರದಿ ಮಂಡನೆ, ನುಂಗಣ್ಣರಿಗೆ ನಡುಕ ಶುರು
2
+
3
+ ಮೈಸೂರು,ಸೆ.3-ಕೋವಿಡ್ ಕುರಿತಂತೆ ವಿಚಾರಣೆ ನಡೆಸಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರು ನೀಡಿರುವ ಮಧ್ಯಂತರ ವರದಿಯನ್ನು ಇದೇ ಗುರುವಾರ ನಡೆ ಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ತಮ ನಿವಾಸದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನಿನ್ನೂ ವರದಿಯನ್ನು ನೋಡಿಲ್ಲ. ಗುರುವಾರದ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚಿಸುತ್ತೇವೆ. ಏನು ಶಿಫಾರಸ್ಸು ಮಾಡಿದ್ದಾರೆ ಎಂದು ನೋಡಿ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
4
+ ವರದಿಯ ಬಗ್ಗೆ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿರುವುದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿಯವರು ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು. ನಾನೇ ಇನ್ನೂ ವರದಿ ನೋಡಿಲ್ಲ ಎಂದು ತಿಳಿಸಿದರು.
5
+ ಸುಧಾಕರ್ ಚಡಪಡಿಸುತ್ತಿರುವುದೇಕೆ?, ಸುಧಾಕರ್ ವರದಿ ನೋಡಿದ್ದಾರೆಯೇ?, ತಪ್ಪು ಮಾಡಿರುವ ಮನೋಭಾವದಿಂದಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಸುಳ್ಳು ವರದಿ ಪಡೆದಿದ್ದೇವೆ ಎಂದು ಅವರಿಗೆ ಹೇಗೆ ಗೊತ್ತಾಗಲು ಸಾಧ್ಯ?, ಸುಧಾಕರ್ ಮನಸ್ಥಿತಿ ಅರ್ಥವಾಗುತ್ತಿದೆ. ತಪ್ಪು ಮಾಡಿರುವ ಪಾಪಪ್ರಜ್ಞೆ ಕಾಡುತ್ತಿರಬಹುದು. ವರದಿ ಬಹಿರಂಗಗೊಂಡು ಅದರಲ್ಲಿನ ಮಾಹಿತಿಗಳು ತಿಳಿಯದ ಹೊರತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
6
+ ಈ ಹಿಂದೆ ನಾವು ಸಾಕಷ್ಟು ಆರೋಪಗಳನ್ನು ಮಾಡಿದ್ದೇವೆ. ಆದರೆ ವಿಚಾರಣಾ ಆಯೋಗದ ವರದಿ ಬಂದಿರುವುದರಿಂದ ಖಚಿತ ಮಾಹಿತಿ ಇಲ್ಲದೆ ಪ್ರತಿಕ್ರಿಯಿಸುವುದಿಲ್ಲ. ಗುರುವಾರ ಸಚಿವ ಸಂಪುಟದ ಬಳಿಕ ಸೂಕ್ತ ಮಾಹಿತಿ ನೀಡಲಾಗುತ್ತದೆ ಎಂದರು.
7
+ ಮುಡಾ ಪ್ರಕರಣದಲ್ಲಿ ನಿವೇಶನ ಹಂಚಿಕೆಯ ಅವ್ಯವಹಾರಗಳ ಕುರಿತು ವಿಚಾರಣೆಗೆ ನ್ಯಾಯಮೂರ್ತಿಯವರ ಆಯೋಗ ರಚನೆ ಮಾಡಲಾಗಿದೆ. ಅದರ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಈ ಹಿಂದೆ ಮುಡಾ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಅವರನ್ನು ನಾನು ಅಮಾನತು ಮಾಡಿಲ್ಲ. ನಗರಾಭಿವೃದ್ಧಿ ಇಲಾಖೆ ಕ್ರಮ ಕೈಗೊಂಡಿರಬಹುದು. ಮತ್ತೊಬ್ಬ ಆಯುಕ್ತರಾಗಿದ್ದ ನಟೇಶ್ ಅವರ ಮೇಲೆ ಯಾವ ಆರೋಪ ಇದೆ ಗೊತ್ತಿಲ್ಲ. ವಿಚಾರಣಾ ಆಯೋಗ ವರದಿ ನೀಡಿದ ಬಳಿಕ ಯಾರೇ ಇದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
8
+ ದಿನೇಶ್ ಅವರ ಅಮಾನತಿನ ಬಗ್ಗೆ ಪದೇಪದೇ ಪ್ರಶ್ನೆಗಳು ಎದುರಾದಾಗ ನಾನು ಅಮಾನತು ಆದೇಶವನ್ನು ನೋಡಿಲ್ಲ ಎಂದು ಸಿಟ್ಟಿನಿಂದ ಪ್ರತಿಕ್ರಿಯಿಸಿದರು.ಚಾಮುಂಡಿ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿತ್ತು. ಅದಕ್ಕೆ ರಾಜ ಮನೆತನದ ಪ್ರಮೋದಾದೇವಿಯವರು ತಡೆಯಾಜ್ಞೆ ತೆಗೆದುಕೊಂಡಿದ್ದರು. ಅದು ತೆರವಾಗಿದೆ. ಹೀಗಾಗಿ ಪ್ರಾಧಿಕಾರ ರಚನೆ ಬಳಿಕ ಮೊದಲ ಸಭೆಯನ್ನು ಬೆಟ್ಟದ ಮೇಲೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
9
+ ಹಿಂದೆಯೂ ದೇವಸ್ಥಾನದ ಆಡಳಿತ ಮಂಡಳಿ ಅಸ್ತಿತ್ವದಲ್ಲಿತ್ತು. ಅದಕ್ಕೆ ಸರ್ಕಾರವೇ ಸದಸ್ಯರು ಮತ್ತು ಅಧ್ಯಕ್ಷರನ್ನು ನೇಮಿಸುತ್ತಿತ್ತು. ದೇವಸ್ಥಾನ ಸರ್ಕಾರದ ಅಧೀನದಲ್ಲೇ ಇತ್ತು ಎಂದು ಹೇಳಿದರು.
10
+ ನ್ಯಾಯಾಲಯದ ತೀರ್ಮಾನದ ಪ್ರಕಾರ ನಾವು ನಡೆದುಕೊಳ್ಳುತ್ತಿದ್ದೇವೆ. ಸಂಸದರು ಹೇಳಿದಂತೆ ಕೇಳಲಾಗುವುದಿಲ್ಲ. ನಾನು ನ್ಯಾಯಾಲಯದ ನಿರ್ದೇಶನದ ಪ್ರಕಾರ ನಡೆದುಕೊಳ್ಳುತ್ತಿದ್ದೇನೆ ಎಂದರು.ಅಂಗನವಾಡಿ ಕಾರ್ಯಕರ್ತರಿಗೆ ಸಕಾಲಕ್ಕೆ ವೇತನ ಪಾವತಿಸಲಾಗಿದೆ. ಎಲ್ಲಿಯಾದರೂ ಹಣ ಬಿಡುಗಡೆಯಾಗದೇ ಬಾಕಿ ಉಳಿದಿದ್ದರೆ ಅದನ್ನು ಪರಿಶೀಲಿಸುತ್ತೇವೆ ಎಂದು ಹೇಳಿದರು.
11
+ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮೇಲೆ ದೇವರ ದರ್ಶನ ಪಡೆಯುತ್ತೇನೆ. ನಾನು ಯಾವುದೇ ಆತಂಕದಲ್ಲಿಲ್ಲ. ವಿರೋಧಪಕ್ಷದಲ್ಲಿದ್ದವರು ಸುಳ್ಳು ಹೇಳಿದ್ದಾರೆ. ಅದು ರುಜುವಾತಾಗದೇ ಇದ್ದರೆ ಕಷ್ಟ ಎಂಬ ಆತಂಕ ಅವರಿಗಿದೆ. ನಾನು ಯಾವತ್ತೂ ಸುಳ್ಳು ಹೇಳಿಲ್ಲ, ತಪ್ಪು ಮಾಡಿಲ್ಲ. ನಾನೇಕೆ ಆತಂಕ ಪಡಲಿ ಎಂದರು.
12
+ ಸಿದ್ದರಾಮಯ್ಯನವರು ಒಪ್ಪಿಗೆ ಕೊಟ್ಟರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧ ಎಂದು ಹಿರಿಯ ಕಾಂಗ್ರೆಸಿಗ ಆರ್.ವಿ.ದೇಶಪಾಂಡೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಅವಕಾಶ ನೀಡುವುದು ಶಾಸಕರು ಹಾಗೂ ಹೈಕಮಾಂಡ್. ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ತಾವು ಬದ್ಧ ಎಂದು ಹೇಳಿದರು.
eesanje/url_46_270_1.txt ADDED
@@ -0,0 +1,6 @@
 
 
 
 
 
 
 
1
+ ಮೂವರು ಡಿಸಿಎಂಗಳ ನೇಮಕ ಗಾಳಿಸುದ್ದಿ ಅಷ್ಟೇ : ಗೃಹ ಸಚಿವ ಪರಮೇಶ್ವರ
2
+ ಬೆಂಗಳೂರು,ಜ.6- ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ನೇಮಕದ ಬಗ್ಗೆ ಸಚಿವರು ವೈಯಕ್ತಿಕ ಅಭಿಪ್ರಾಯವನ್ನು ಹೇಳಿರುತ್ತಾರೆ. ರಾಜಣ್ಣ ಅವರ ಹೇಳಿಕೆಯೂ ಅಷ್ಟೆ. ಅವರ ದೃಷ್ಟಿಯಲ್ಲಿ ಒಳ್ಳೆಯದು ಇರಬಹುದು. ಹೀಗಾಗಿ ಹೇಳಿರುತ್ತಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದರು.
3
+ ಸಚಿವರ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿ, ಒಬ್ಬೊಬ್ಬರು ಒಂದೊಂದು ಕಾರಣ ಇಟ್ಟುಕೊಂಡು ದೆಹಲಿಗೆ ಹೋಗುತ್ತಾರೆ. ಈ ವೇಳೆ ಪಕ್ಷದ ಮುಖ್ಯ ಕಚೇರಿಗೆ ಹೋಗಿ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡುವುದು, ಸಾಧ್ಯವಾದರೆ ಅಧ್ಯಕ್ಷರ ಜತೆ ಚರ್ಚಿಸುತ್ತಾರೆ. ಆಡಳಿತದಲ್ಲಿರುವಾಗ ಪಕ್ಷದ ಹೈಕಮಾಂಡ್ ಸಲಹೆಗಳನ್ನು ಸ್ವೀಕರಿಸಬೇಕು. ಇದೆಲ್ಲ ಸಾಮಾನ್ಯವಾಗಿ ನಡೆಯುವ ಬೆಳವಣಿಗೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದರು.
4
+ ಪಿಎಸ್‍ಎಲ್‍ವಿ ಎಕ್ಸ್‌ಪೋಸ್ಯಾಟ್‌ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ : ಇಸ್ರೋ ಮುಖ್ಯಸ್ಥ ಸೋಮನಾಥ್
5
+ ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸುವಂತೆ ನನಗೆ ಯಾರೂ ಹೇಳಿಲ್ಲ. ಕೋಲಾರ ಕ್ಷೇತ್ರದಿಂದ ಸ್ರ್ಪಧಿಸುತ್ತೇನೆ ಎಂಬುದು ಮಾಧ್ಯಮದಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಹೈಕಮಾಂಡ್ ಸೂಚಿಸಿದರೆ ಮುಂದಿನ ತೀರ್ಮಾನದ ಬಗ್ಗೆ ತಿಳಿಸುತ್ತೇನೆ ಎಂದರು.
6
+ ಬಾಂಬ್ ಬೆದರಿಕೆ ಕರೆಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಲಾಗುತ್ತಿದೆ. ಕಸ್ತೂರು ಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂಗೂ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಐಪಿ ಅಡ್ರೆಸ್ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದರು.
eesanje/url_46_270_10.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಸಿರಿಧಾನ್ಯ ಬೆಳೆಯಲು ಪ್ರತ್ಯೇಕ ಕೋಶ ರಚನೆ : ಸಿಎಂ
2
+ ಬೆಂಗಳೂರು,ಜ.5- ವಿದೇಶಗಳಿಗೆ ರಫ್ತು ಮಾಡುವ ಗುಣಮಟ್ಟದ ರಾಗಿ ಸೇರಿದಂತೆ ಇತರ ಸಿರಿಧಾನ್ಯಗಳನ್ನ ಬೆಳೆಯಲು ಪ್ರತ್ಯೇಕವಾದ ಕೋಶ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 8 ಲಕ್ಷ ಹೆಕ್ಟೇರ್‍ನಲ್ಲಿ ರಾಗಿ, 5 ಲಕ್ಷ ಹೆಕ್ಟೇರ್‍ನಲ್ಲಿ ಜೋಳ, 1.31 ಲಕ್ಷ ಹೆಕ್ಟೇರ್‍ನಲ್ಲಿ ಸಜ್ಜೆ ಬೆಳೆಯಲಾಗುತ್ತಿದೆ. 20 ಲಕ್ಷ ಟನ್ ಸಿರಿಧಾನ್ಯಗಳು ರಾಜ್ಯದಲ್ಲಿ ಉತ್ಪಾದನೆಯಾಗುತ್ತದೆ ಎಂದರು.
3
+ ವಿದೇಶಗಳಿಗೆ ರಫ್ತು ಮಾಡುವ ಗುಣಮಟ್ಟದ ರಾಗಿ ಲಭ್ಯವಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರತ್ಯೇಕ ಕೋಶ ರಚನೆ ಮಾಡಿ ರಫ್ತು ಗುಣಮಟ್ಟದ ಸಿರಿಧಾನ್ಯ ಬೆಳೆಯಲು ಮುಂದಿನ ವರ್ಷದಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಪಡಿತರ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ, ಇಂದಿರಾ ಕ್ಯಾಂಟಿನ್‍ನಲ್ಲಿ ಸಿರಿಧಾನ್ಯದ ಬಳಕೆಗೆ ಪ್ರೋತ್ಸಾಹ ನೀಡಲಾಗುವುದು. ಇದಕ್ಕಾಗಿ ಆಹಾರ, ಶಿಕ್ಷಣ, ನಗರಾಭಿವೃದ್ಧಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ವಿಶೇಷ ಸಭೆ ನಡೆಸು ವುದಾಗಿ ಹೇಳಿದರು.
4
+ ಸಿರಿಧಾನ್ಯಗಳ ಇಳುವರಿ ಕಡಿಮೆ ಎಂಬ ಆಕ್ಷೇಪಣೆಯಿದೆ. ಹೊಸ ತಳಿ ಅಭಿವೃದ್ಧಿಪಡಿಸಲು ವಿಜ್ಞಾನಿಗಳು ಕ್ರಮ ಕೈಗೊಳ್ಳಬೇಕು. ಬರಗಾಲದ ಸಂದರ್ಭದಲ್ಲಿ ಸಿರಿಧಾನ್ಯಗಳ ಬೆಳೆ ಲಾಭದಾಯಕವಾಗಲಿವೆ. ವಿಶ್ವವಿದ್ಯಾಲಯಗಳಲ್ಲಿನ ಪ್ರಯೋಗಗಳು ಕೃಷಿ ಭೂಮಿಗೆ ತಲುಪಬೇಕು. ಕೃಷಿ ಭೂಮಿಯ ಸಮಸ್ಯೆಗಳು ಪ್ರಯೋಗಾಲಯದಲ್ಲಿ ಸಮೀಕ್ಷೆಗೊಳಗಾಗಬೇಕು. ಕೃಷಿ ಭೂಮಿ ಕಡಿಮೆಯಾಗುತ್ತಿದೆ. ಅದಕ್ಕನುಗುಣವಾಗಿ ಕಡಿಮೆ ಮಳೆ ಹಾಗೂ ಭೂಮಿಯಲ್ಲಿ ಬಹು ಮಾದರಿಯ ಕೃಷಿ ಪ್ರಯೋಗಗಳಾಗಬೇಕು. ವಿಶ್ವವಿದ್ಯಾಲಯಗಳು ಸಂಶೋಧನೆಗೆ ಒತ್ತು ನೀಡಬೇಕು ಎಂದರು.
5
+ ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌
6
+ ಮನಷ್ಯ ಕೃಷಿ ಆರಂಭಿಸಿದ ದಿನ ದಿಂದಲೂ ಸಿರಿಧಾನ್ಯ ಬೆಳೆಯುತ್ತಿದ್ದಾನೆ. ಕಡಿಮೆ ಮಳೆ ಯಾಗುವ ಪ್ರದೇಶಗಳಲ್ಲಿ ಸಿರಿಧಾನ್ಯ ವರದಾನದ ಬೆಳೆಯಾಗಿದೆ ಎಂದು ತಿಳಿಸಿದರು. ಸಿರಿಧಾನ್ಯದ ಬಳಕೆ ದೇಶಿಯವಾಗಿಯೂ ಹೆಚ್ಚುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ರಫ್ತುಗೊಳ್ಳುತ್ತಿವೆ. ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯ ಮತ್ತು ಸಾವಯವ ಕೃಷಿ ಹೆಚ್ಚು ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಜನಸಂಖ್ಯೆ ಹೆಚ್ಚಿರುವ ಭಾರತದಲ್ಲಿ ಆಹಾರದ ಸ್ವಾವಲಂಬನೆಗಾಗಿ ಹಾಗೂ ಆಗಿನ ಪ್ರಧಾನಿ ಇಂದಿರಾಗಾಂಧಿ, ದಿ.ಮಾಜಿ ಕೃಷಿ ಸಚಿವ ಬಾಬು ಜಗಜೀವನರಾಂ ಹಸಿರು ಕ್ರಾಂತಿಗೆ ಮುನ್ನುಡಿ ಬರೆದರು.
7
+ ವಿಶ್ವದಲ್ಲಿ ಚೀನಾವನ್ನು ಹಿಂದಿಟ್ಟು ಜನಸಂಖ್ಯೆಯಲ್ಲಿ ನಾವು ನಂ.1 ಸ್ಥಾನಕ್ಕೇರಿದ್ದೇವೆ. ಎಲ್ಲರಿಗೂ ಆಹಾರ ಒದಗಿಸುವ ಸಲುವಾಗಿ ರಾಸಾಯನಿಕ ಬಳಸಿ ಹೆಚ್ಚು ಆಹಾರ ಉತ್ಪಾದನೆ ಮಾಡಲಾಗುತ್ತಿದೆ. ಆದರೆ ರಾಸಾಯನಿಕ ಬಳಕೆ ಸುರಕ್ಷತೆಯಲ್ಲ ಎಂಬ ಕಾರಣಕ್ಕಾಗಿ ಮತ್ತೆ ಸಾವಯವ ಕೃಷಿಗೆ ಮೊರೆ ಹೋಗಲಾಗುತ್ತಿದೆ. ರಾಜ್ಯದಲ್ಲಿ 2004 ರಲ್ಲಿ ಮೊದಲ ಬಾರಿಗೆ ಸಾವಯವ ಕೃಷಿ ನೀತಿ ಜಾರಿಗೆ ತರಲಾಯಿತು. 2017 ರಲ್ಲಿ ಅದನ್ನು ಪರಿಷ್ಕರಣೆ ಮಾಡಿ ಬೆಂಬಲ ನೀಡುತ್ತಿದೆ ಎಂದು ಹೇಳಿದರು.
8
+ ಸಿರಿಧಾನ್ಯಗಳಲ್ಲಿ ಸಾರಜನಕ, ಲವಣಾಂಶ, ವಿಟಮಿನ್ ಮತ್ತು ನಾರಿನಂಶಗಳು ಹೇರಳವಾಗಿವೆ. ರಾಸಾಯನಿಕ ಬಳಕೆಯಿಂದ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್, ಹೃದ್ರೋಗದಂತಹ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತವೆ. ಸಿರಿಧಾನ್ಯಗಳು ಆರೋಗ್ಯಕರವಾಗಿವೆ. ಇವುಗಳ ಸುಸ್ಥಿರ ಕೃಷಿ ಹಾಗೂ ವಾಯುಗುಣ ಯೋಗ್ಯ ತಳಿಗಳ ಅಭಿವೃದ್ಧಿ ಅಗತ್ಯ ಎಂದು ಅವರು ಹೇಳಿದರು.
9
+ ಅಧ್ಯಕ್ಷತೆ ವಹಿಸಿದ್ದ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಮಾತನಾಡಿ, ರಾಜ್ಯದಲ್ಲಿ 35 ಸಾವಿರ ಎಕರೆಯಲ್ಲಿ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಪ್ಯಾಕೇಜಿಂಗ್ ಬ್ರಾಂಡಿಂಗ್‍ಗೆ 10 ಕೋಟಿ ರೂ. ಅನುದಾನ ನೀಡಲಾಗಿದೆ. 5 ಲಕ್ಷ ರೂ.ವರೆಗೂ ಬೆಳೆಗಾರರಿಗೆ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು.
10
+ ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮೀಕ್ಷೆ ಮಾಡಿ ಸೆಪ್ಟೆಂಬರ್ 22 ರಂದು ದೇಶದಲ್ಲೇ ಮೊದಲ ಬಾರಿಗೆ ವರದಿ ನೀಡಿದ್ದು ಕರ್ನಾಟಕ ಸರ್ಕಾರ. ಕೇಂದ್ರ ಸರ್ಕಾರದ ಎಲ್ಲರಿಗೂ ಪತ್ರ ಬರೆದಿದ್ದೇವೆ, ಪರಿಹಾರದ ನಿರೀಕ್ಷೆಯಲ್ಲಿದ್ದೇವೆ ಎಂದರು.
11
+ ಇಂದಿನ ಕೃಷಿ ಮೇಳದಲ್ಲಿ 14 ರಾಜ್ಯಗಳು ಭಾಗವಹಿಸಿವೆ. ಸಿರಿಧಾನ್ಯ ಬೆಳೆಯ ಉತ್ಪಾದನೆ ಹೆಚ್ಚಾಗಬೇಕು. ಬಳಕೆ ಹೆಚ್ಚಾಗಬೇಕು. ರೈತರು ಸಮೃದ್ಧಿಯಾಗಬೇಕು. ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಪಡೆಯಬೇಕು ಎಂಬುದಾಗಿದೆ. ಅತೀ ಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯದಲ್ಲಿ ನಾವು ಮೊದಲ ಸ್ಥಾನದಲ್ಲಿದ್ದೇವೆ. ರಫ್ತಿನಲ್ಲಿ ಶೇ.9 ರಷ್ಟು ಪಾಲು ಹೊಂದಿದ್ದೇವೆ ಎಂದು ವಿವರಿಸಿದರು.
12
+ ಮೇಳದಲ್ಲಿ ಸಾರ್ವಜನಿಕರೇ ಸಿರಿಧಾನ್ಯ ಪದಾರ್ಥಗಳ ಅಡುಗೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಯಶಸ್ವಿ ಮೇಳವನ್ನು ಆಯೋಜಿಸಲಾಗಿದೆ ಎಂದರು. ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ ಮಾತನಾಡಿ, ಜನವರಿ 22 ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮಮಂದಿರದಲ್ಲಿನ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ದೇಶದ ಎಲ್ಲರಿಗೂ ಆಹ್ವಾನ ನೀಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಆಹ್ವಾನ ನೀಡಿದರು.
13
+ 15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ
14
+ ಕರ್ನಾಟಕ ಸರ್ಕಾರ ನಡೆಸಿರುವ ಬೆಳೆ ಸಮೀಕ್ಷೆ ಮಾದರಿಯಾಗಿದೆ ಎಂ���ು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸಿರಿಧಾನ್ಯಗಳ ಬೆಳೆ ಹಾಗೂ ಬಳಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ಪ್ರೋತ್ಸಾಹಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ಸಾವಯವ ಕೃಷಿ ಬೆಳೆಗಾರರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
15
+ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲï, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.