CoolCoder44 commited on
Commit
8c59dd5
·
verified ·
1 Parent(s): ebd362a

d84cc7ae098db9aba0aee00bd2e231de6b4430bb6c48e447bd482ca639cd7e71

Browse files
Files changed (50) hide show
  1. eesanje/url_46_262_8.txt +6 -0
  2. eesanje/url_46_262_9.txt +7 -0
  3. eesanje/url_46_263_1.txt +14 -0
  4. eesanje/url_46_263_10.txt +11 -0
  5. eesanje/url_46_263_11.txt +8 -0
  6. eesanje/url_46_263_12.txt +11 -0
  7. eesanje/url_46_263_2.txt +10 -0
  8. eesanje/url_46_263_3.txt +6 -0
  9. eesanje/url_46_263_4.txt +8 -0
  10. eesanje/url_46_263_5.txt +11 -0
  11. eesanje/url_46_263_6.txt +9 -0
  12. eesanje/url_46_263_7.txt +6 -0
  13. eesanje/url_46_263_8.txt +6 -0
  14. eesanje/url_46_263_9.txt +10 -0
  15. eesanje/url_46_264_1.txt +7 -0
  16. eesanje/url_46_264_10.txt +6 -0
  17. eesanje/url_46_264_11.txt +7 -0
  18. eesanje/url_46_264_12.txt +7 -0
  19. eesanje/url_46_264_2.txt +6 -0
  20. eesanje/url_46_264_3.txt +6 -0
  21. eesanje/url_46_264_4.txt +11 -0
  22. eesanje/url_46_264_5.txt +13 -0
  23. eesanje/url_46_264_6.txt +8 -0
  24. eesanje/url_46_264_7.txt +6 -0
  25. eesanje/url_46_264_8.txt +5 -0
  26. eesanje/url_46_264_9.txt +12 -0
  27. eesanje/url_46_265_1.txt +9 -0
  28. eesanje/url_46_265_10.txt +10 -0
  29. eesanje/url_46_265_11.txt +8 -0
  30. eesanje/url_46_265_12.txt +5 -0
  31. eesanje/url_46_265_2.txt +8 -0
  32. eesanje/url_46_265_3.txt +7 -0
  33. eesanje/url_46_265_4.txt +7 -0
  34. eesanje/url_46_265_5.txt +6 -0
  35. eesanje/url_46_265_6.txt +6 -0
  36. eesanje/url_46_265_7.txt +6 -0
  37. eesanje/url_46_265_8.txt +9 -0
  38. eesanje/url_46_265_9.txt +5 -0
  39. eesanje/url_46_266_1.txt +8 -0
  40. eesanje/url_46_266_10.txt +7 -0
  41. eesanje/url_46_266_11.txt +11 -0
  42. eesanje/url_46_266_12.txt +9 -0
  43. eesanje/url_46_266_2.txt +9 -0
  44. eesanje/url_46_266_3.txt +9 -0
  45. eesanje/url_46_266_4.txt +6 -0
  46. eesanje/url_46_266_5.txt +8 -0
  47. eesanje/url_46_266_6.txt +9 -0
  48. eesanje/url_46_266_7.txt +10 -0
  49. eesanje/url_46_266_8.txt +7 -0
  50. eesanje/url_46_266_9.txt +8 -0
eesanje/url_46_262_8.txt ADDED
@@ -0,0 +1,6 @@
 
 
 
 
 
 
 
1
+ ಪತಿಯನ್ನು ಕೊಂದು ನಾಟಕವಾಡಿದ್ದ ಪತ್ನಿ, ಪ್ರಿಯಕರ ಖಾಕಿ ಬಲೆಗೆ
2
+ ಬೆಂಗಳೂರು, ಜ.13- ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಮಾಡಿ ಹೃದಯಘಾತವೆಂದು ಬಿಂಬಿಸಲು ಯತ್ನಿಸಿದ್ದ ಖತರ್ನಾಕ್ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಎಚ್‍ಎಸ್‍ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಆಂಧ್ರಪ್ರದೇಶದ ಸತ್ಯಸಾಯಿ ತಾಲ್ಲೂಕಿನ ನಂದಿನಿ ಬಾಯಿ ಹಾಗೂ ತನ್ನ ಊರಿನವನೇ ಆದ ಪ್ರಿಯಕರ ಬಂಧಿತರು.
3
+ ಎಚ್‍ಎಸ್‍ಆರ್ ಲೇಔಟ್‍ನ ಮನೆಯಲ್ಲಿ ನಂದಿನಿ ಬಾಯಿ ಪತಿ ವೆಂಕಟ್‍ನಾಯಕ್ (30) ಜೊತೆ ವಾಸವಾಗಿದ್ದಳು. ವೆಂಕಟ್‍ನಾಯಕ್ ಅವರು ಸೇಲ್ಸ್ ಎಕ್ಸಿಕ್ಯೊಟಿವ್ ಕೆಲಸ ಮಾಡುತ್ತಿದ್ದರು. ಮದುವೆಯಾಗಿದ್ದರೂ ಸಹ ನಂದಿನಿ ಬಾಯಿ ತನ್ನ ಪ್ರಿಯಕರನನ್ನು ಮರೆತಿರಲಿಲ್ಲ, ಆತನೂ ಸಹ ಈಕೆಯನ್ನಿ ಭೇಟಿಯಾಗಲು ಆಗಾಗ್ಗೆ ಆಂದ್ರದಿಂದ ನಗರಕ್ಕೆ ಬರುತ್ತಿದ್ದನು. ಈ ನಡುವೆ ಜ.9ರಂದು ಪತಿ ವೆಂಕಟ್‍ನಾಯಕ್ ಕೆಲಸಕ್ಕೆ ಹೋಗಿದ್ದಾಗ ಪ್ರಿಯಕರನನ್ನು ನಂದಿನಿ ಮನೆಗೆ ಕರೆಸಿಕೊಂಡಿದ್ದಾಳೆ. ಆ ಸಂದರ್ಭದಲ್ಲಿ ದಿಡೀರ್ ಪತಿ ಮನೆಗೆ ಬಂದಿದ್ದಾರೆ.
4
+ ಪತ್ನಿ ಬೇರೆ ವ್ಯಕ್ತಿ ಜೊತೆ ಸಲುಗೆಯಿಂದ ಇರುವುದನ್ನು ನೋಡಿ ಕೋಪಗೊಂಡು ನಂದಿನಿ ಜೊತೆ ಜಗಳವಾಡಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ತಾರಕಕ್ಕೇರಿದೆ. ಆ ವೇಳೆ ನಂದಿನಿ ಪ್ರಿಯಕರನೊಂದಿಗೆ ಸೇರಿಕೊಂಡು ವೆಂಕಟ್‍ನಾಯಕ್ ಅವರ ತಲೆ ಮೇಲೆ ರುಬ್ಬುವ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಮೃತದೇಹವನ್ನು ಮನೆ ಹೊರಗಿನ ಶೌಚಾಲಯದ ಬಳಿಯಿಟ್ಟು ಹೃದಯಘಾತವೆಂದು ಬಿಂಬಿಸಲು ಯತ್ನಿಸಿ ನಂತರ ಕಲ್ಲಿನ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆಂದು ಪೊಲೀಸರಿಗೆ ನಂದಿನಿ ತಿಳಿಸಿದ್ದಾಳೆ.
5
+ ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ
6
+ ಅಂದು ಪೊಲೀಸರು ಅಸಹಜ ಸಾವೆಂದು ದಾಖಲಿಸಿಕೊಂಡು, ನಂತರ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದಾಗ, ದೂರು ಕೊಟ್ಟ ನಂದಿನಿ ಮೇಲೆಯೇ ಅನುಮಾನ ಬಂದು ಆಕೆಯ ಚಲನವಲನ ಗಮನಿಸುತ್ತಿದ್ದರು. ಈ ನಡುವೆ ಮರಣೋತ್ತರ ವರದಿ ಬಂದಾಗ ವೆಂಕಟನಾಯಕ್ ಕೊಲೆಯಾಗಿರುವುದು ಗೊತ್ತಾಗಿದೆ. ಬಳಿಕ ನಂದಿನಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಕಣ್ಣೀರಿಡುತ್ತಾ ಮತ್ತೆ ನಾಟಕವಾಡಿದ್ದಾಳೆ. ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಿಸಿದಾಗ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದಾಗಿ ಬಾಯಿಬಿಟ್ಟಿದ್ದಾಳೆ. ಸದ್ಯ ಇಬ್ಬರನ್ನೂ ಬಂಧಿಸಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
eesanje/url_46_262_9.txt ADDED
@@ -0,0 +1,7 @@
 
 
 
 
 
 
 
 
1
+ 2 ಕೋಟಿ ಮೌಲ್ಯದ ನಕಲಿ ಮೈಸೂರು ಸ್ಯಾಂಡಲ್ ಸಾಬೂನು ವಶ
2
+ ಬೆಂಗಳೂರು, ಜ.13- ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದ್‍ನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಸಲಾಗಿದೆ. ಮಾಲಕಪೇಟೆ ಪೊಲೀಸರು ದೂರು ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
3
+ ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆಎಸ್‍ಡಿಎಲ್ ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ ಅವರಿಗೆ ಅನಾಮಧೇಯ ಕರೆ ಬಂದಿತ್ತು. ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು ಎಂದು ವಿವರಿಸಲಾಗಿದೆ.
4
+ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಕೆಎಸ್‍ಡಿಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪವೃತ್ತರಾದರು. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂಪಾಯಿ ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಈ ರೀತಿ ನಡೆದ ಕಾರ್ಯಾಚರಣೆಯಲ್ಲಿ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆ ಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ.
5
+ ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ
6
+ ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್ ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1800 ಪೀಸ್ ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್ ಗಳು (9400 ಪೀಸ್ ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್ ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
7
+ ಕೆಎಸ್‍ಡಿಎಲ್ ಉತ್ಪನ್ನಗಳ ಮಾರುಕಟ್ಟೆಯನ್ನು ದೇಶ ಹಾಗೂ ವಿದೇಶಗಳಿಗೆ ವಿಸ್ತರಿಸಲು ಸ್ವತಃ ಆಸಕ್ತಿ ವಹಿಸಿ ಕ್ರಮ ತೆಗೆದುಕೊಂಡಿರುವ ��ಚಿವರು, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತರಿಗೊಳಿಸಲು ಗಮನ ವಹಿಸಲಾಗುವುದು ಎಂದಿದ್ದಾರೆ.
eesanje/url_46_263_1.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಹಾನಗಲ್‍ನ ಅತ್ಯಾಚಾರ ಪ್ರಕರಣ ಎಸ್‍ಐಟಿಗೆ ವಹಿಸಲು ಬೊಮ್ಮಾಯಿ ಒತ್ತಾಯ
2
+ ಬೆಂಗಳೂರು,ಜ.13- ಹಾವೇರಿ ಜಿಲ್ಲೆ ಹಾನಗಲ್‍ನ ಖಾಸಗಿ ಹೋಟೆಲ್‍ನಲ್ಲಿ ಯುವತಿಯೊಬ್ಬಳ ಮೇಲೆ ನಡೆಸಿರುವ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿ ವಿಶೇಷ ಪೊಲೀಸ್ ತಂಡ(ಎಸ್‍ಐಟಿ) ವಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
3
+ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಪ್ರಕರಣ ನಡೆದು ಮೂರು ದಿನಗಳಾದರೂ ಆರೋಪಿಗಳ ವಿರುದ್ಧ ಪೊಲೀಸರು ಏಕೆ ಎಫ್‍ಐಆರ್ ದಾಖಲಿಸಿಲ್ಲ. ಸ್ವತಃ ಯುವತಿಯೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿದ್ದರೂ ಅವರ ವಿರುದ್ಧ ಕ್ರಮ ಏಕೆ ಜರುಗಿಸಿಲ್ಲ ಎಂದು ಪ್ರಶ್ನೆ ಮಾಡಿದರು. ಆರೋಪಿಗಳು ಅಲ್ಪಸಂಖ್ಯಾತರು ಎಂಬ ಕಾರಣಕ್ಕಾಗಿ ಅವರ ವಿರುದ್ಧ ದೂರು ದಾಖಲಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಮೊದಲು ಪೊಲೀಸರು ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಪ್ರಕರಣಕ್ಕೆ ತಿಪ್ಪೆ ಸಾರಿಸುವ ಕೆಲಸ ಮಾಡಲು ಮುಂದಾಗಿದ್ದರು.
4
+ ಈಗ ಸಂತ್ರಸ್ತೆ ಮಹಿಳೆಯೇ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ವಿಡಿಯೋ ಕಾಲ್ ಮಾಡಿ ಹೇಳಲಾಗಿದೆ. ಪ್ರಕರಣವನ್ನು ಸರಿಯಾಗಿ ನಿರ್ವಹಿಸದ ಪೊಲೀಸರನ್ನು ಅಮಾನತುಪಡಿಸಬೇಕು. ನಿಷ್ಪಾಕ್ಷಪಾತ ತನಿಖೆಯಾಗಬೇಕೆಂದರೆ ಎಸ್‍ಐಟಿಗೆ ವಹಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ನಾವು ಏನು ಮಾಡಿದರೂ ನಡೆಯುತ್ತದೆ ಎಂಬ ಅಹಂನಲ್ಲಿ ಯುವಕರು ಈ ಕೃತ್ಯವನ್ನು ಎಸಗಿದ್ದಾರೆ. ಕೆಲವು ವರ್ಗಗಳು ನಮ್ಮನ್ನು ಯಾರು ಮುಟ್ಟುವ ಧೈರ್ಯ ಮಾಡುವುದಿಲ್ಲ ಎಂಬ ಭ್ರಮೆಯಲ್ಲಿದ್ದಾರೆ. ಪೊಲೀಸರ ವೈಫಲ್ಯ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.
5
+ ಒಂದು ವೇಳೆ ಇದೇ ಕೃತ್ಯವನ್ನು ಬೇರೆ ಸಮುದಾಯದವರು ಮಾಡಿದ್ದರೆ ದೂರು ದಾಖಲಾಗುವ ಮುನ್ನವೇ ಅವರನ್ನು ಬಂಧಿಸಿ ಹೊರಗೆ ಹಾಕುತ್ತಿದ್ದೀರಿ. ಅಲ್ಪಸಂಖ್ಯಾತ ಸಮುದಾಯದ ರಕ್ಷಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್‍ನವರು ಈಗ ಅದೇ ಸಮುದಾಯದ ಆರೋಪಿಗಳನ್ನು ರಕ್ಷಣೆ ಮಾಡಲು ಹೊರಟಿರುವುದು ದುರ್ದೈವವೇ ಸರಿ ಎಂದರು.
6
+ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾರಿಗು ಕೂಡ ರಕ್ಷಣೆ ಇಲ್ಲದಂತಾಗಿದೆ. ಪೊಲೀಸ್ ಠಾಣೆಗಳು ಕಲೆಕ್ಷನ್ ಅಡ್ಡಗಳಾಗಿವೆ. ಕೆಲವರು ದುಡ್ಡು ಕೊಟ್ಟು ಪೋಸ್ಟಿಂಗ್ ಮಾಡಿಕೊಂಡಿದ್ದಾರೆ. ಪ್ರತಿ ಪೊಲೀಸ್ ಠಾಣೆಯಲ್ಲಿ ತಿಂಗಳಿಗೆ ಇಂತಿಷ್ಟು ಕೊಡಬೇಕೆಂದು ಇನ್‍ಸ್ಪೆಕ್ಟರ್ ಸೇರಿದಂತೆ ಹಿರಿಯ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹೀಗಾದರೆ ಪೊಲೀಸರು ಕರ್ತವ್ಯ ನಿರ್ವಹಿಸುವುದು ಹೇಗೆ ಪ್ರಶ್ನಿಸಿದರು.
7
+ ಶೀಘ್ರದಲ್ಲೇ ಇಂಡಿ ಮೈತ್ರಿಕೂಟ ಪತನವಾಗಲಿದೆ : ದಿಲೀಪ್ ಘೋಷ್
8
+ ಹಾನಗಲ್ ಜೊತೆಗೆ ಕೋಲಾರದ ಮೇಲೂ ಯುವತಿ ಮೇಲೆ ಸಾಮೂಹ���ಕ ಅತ್ಯಾಚಾರವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಕರ್ನಾಟಕ ಜಂಗಲ್ ರಾಜ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು. ಒಂದು ವೇಳೆ ಸರ್ಕಾರ ಎಸ್‍ಐಟಿ ತನಿಖೆ ವಹಿಸದಿದ್ದರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಸದ್ಯದಲ್ಲೇ ಸಂತ್ರಸ್ತ ಮಹಿಳೆಯನ್ನು ನಮ್ಮ ಪಕ್ಷದ ನಿಯೋಗ ಭೇಟಿ ಮಾಡಲಿದೆ ಎಂದು ತಿಳಿಸಿದರು.
9
+ ಈ ಪ್ರಕರಣವನ್ನು ಸರ್ಕಾರ ಮುಚ್ಚಿ ಹಾಕಲು ಮುಂದಾಗಿತ್ತು. ಯಾವಾಗ ಸಂತ್ರಸ್ತ ಮಹಿಳೆ ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿಕೆ ದಾಖಲಿಸಿದರೋ ಕೊನೆಗೆ ವಿಧಿ ಇಲ್ಲದೆ ಆರೋಪಿಗಳನ್ನು ಬಂಧಿಸಿದ್ದಾರೆ. ಇದೇನ ನಿಮ್ಮ ಆಡಳಿತ ಎಂದು ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು.
10
+ ಕಾಂಗ್ರೆಸ್ ನಾಯಕರಿಗೆ ರಾಜ್ಯದ ಕಾನೂನಿನ ಮೇಲೆ ನಂಬಿಕೆ ಇಲ್ಲ. ಡಿಜೆಹಳ್ಳಿ ಕೆಜೆಹಳ್ಳಿ ಪ್ರಕರಣ ದಲ್ಲಿ ಆರೋಪಿಗಳ ಬಗ್ಗೆ ವಿಚಾರಣೆ ನಡೆಯುತ್ತಿದೆ. ಆದರೆ, ಡಿಸಿಎಂ ಅವರನ್ನು ಅಮಾಯಕರು ಎಂದು ಹೇಳುತ್ತಾರೆ. ಪೊಲೀಸರ ಕ್ರಮ ಸರಿ ಇದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಓಲೈಕೆ ರಾಜಕಾರಣ ಮಾಡುತ್ತಾರೆ.
11
+ ಜಾತ್ಯಾತೀತತೆ ಎಂದರೆ ಎಲ್ಲ ಧರ್ಮ, ಜಾತಿಯವರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದು. ಈ ಪ್ರಕರಣದಲ್ಲಿ ಎಸ್ ಐಟಿ ಮಾಡಿ ಪೊಲಿಸರಿಗೆ ಮುಕ್ತ ಅವಕಾಶ ಕೊಡಬೇಕು. ಆಗ ನ್ಯಾಯ ದೊರೆಯುತ್ತದೆ.ಸರ್ಕಾರ ಎಸ್ ಐಟಿ ಮಾಡದಿದ್ದರೆ ನಾವು ಕಾನೂನು ಹೋರಾಟ ಮಾಡುತ್ತೇವೆ. ನಮ್ಮ ಪಕ್ಷದ ಮಹಿಳಾ ನಿಯೋಗ ಭೇಟಿ ನೀಡಲಿದೆ. ಎಸ್ ಐಟಿ ರಚನೆ ಮಾಡದಿದ್ದರೆ ನ್ಯಾಯಾಂಗ ಮಾರ್ಗದರ್ಶನದಲ್ಲಿ ಪ್ರಕರಣ ಮಾನಿಟರ್ ಮಾಡಲಿ ಎಂದು ಬಯಸುತ್ತೇವೆ.
12
+ ರಾಜ್ಯಕ್ಕೆ ಅನ್ಯಾಯವಾಗಲು ಸಿದ್ದರಾಮಯ್ಯ ಅವರ ಸರ್ಕಾರವೇ ಕಾರಣ. 14ನೇ ಹಣಕಾಸು ಆಯೋಗದ ಸಂದರ್ಭದಲ್ಲಿ ಸಿದ್ದರಾಮಯ್ಯ ಕೇಂದ್ರಕ್ಕೆ ರಾಜ್ಯದವಸ್ತು ಸ್ಥಿತಿ ಸರಿಯಾಗಿ ಮಾಹಿತಿ ನೀಡದ ಕಾರಣ ನಮಗೆ ಕಡಿಮೆ ಅನುದಾನ ಬಂದಿದೆ. 14 ನೇ ಹಣಕಾಸು ಆಯೋಗದಲ್ಲಿ ಸುಮಾರು 2300 ಕೋಟಿ ಬಾಕಿ ಇತ್ತು ಅದರಲ್ಲಿ 1100 ಕೋಟಿ ರೂ ಬಿಡುಗಡೆಯಾಗಿದೆ. ಉಳಿದ ಹಣವನ್ನು ಅಂತಿಮ ಕಂತಾಗಿ ಕೇಂದ್ರ ಸರ್ಕಾರ ಎಲ್ಲವನ್ನು ಪರಿಶೀಲನೆ ಮಾಡಿ ಬಿಡುಗಡೆ ಮಾಡಬಹುದು.
13
+ ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಸಡಗರ
14
+ ಸಿದ್ದರಾಮಯ್ಯ ಅವರಿಗೆ ಸಲಹೆಗಾರರು ಬಹಳಜನ ಇದ್ದಾರೆ. ಹೀಗಾಗಿ ರಾಮ ಮಂದಿರ ವಿಚಾರದಲ್ಲಿ ಅವರು ದಿನಕ್ಕೊಂದು ಹೇಳಿಕೆ ನೀಡಿದ್ದಾರೆ. ಒಂದು ದಿನ ನಾನೇ ರಾಮ ಅಂತಾರೆ ಮತ್ತೊಂದು ರಾಮ ಮಂದಿರ ಉದ್ಘಾಟನೆಗೆ ಹೋಗುವುದಿಲ್ಲ ಎನ್ನುತ್ತಾರೆ. ಅದರಿಂದ ರಾಜಕೀಯವಾಗಿ ಕಷ್ಟವಾಗಲಿದೆ ಎಂದು ಇನ್ನೊಬ್ಬ ಸಲಹೆಗಾರರು ಹೇಳಿದಾಗ ಅಯೋದ್ಯೆಗೆ ಹೋಗುವುದಾಗಿ ಹೇಳುತ್ತಾರೆ ಎಂದು ಇದೇ ವೇಳೆ ಅವರು ಟೀಕಿಸಿದರು.
eesanje/url_46_263_10.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಲೋಕಸಭೆ ಚುನಾವಣೆಯಲ್ಲಿ`ಕೈ’ ಅಭ್ಯರ್ಥಿಗಳು ಸೋತರೆ ಸಚಿವರ ತಲೆದಂಡ!
2
+ ಬೆಂಗಳೂರು,ಜ.12- ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಗಳಿರುವ ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡರೆ ಅದಕ್ಕೆ ಚುನಾವಣಾ ಸಂಯೋಜಕರಾಗಿರುವ ಸಚಿವರುಗಳ ತಲೆದಂಡ ಮಾಡುವುದಾಗಿ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಯಲ್ಲಿ ನಿನ್ನೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಚುನಾವಣಾ ವೀಕ್ಷ ಕರ ಸಭೆ ನಡೆಯಿತು.
3
+ ಅದರಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಕೇರಳ, ಲಕ್ಷದ್ವೀಪ, ಪುದುಚೆರಿ, ಒಡಿಸ್ಸಾ, ಆಂಧ್ರಪ್ರದೇಶ, ಅಂಡಮಾನ್-ನಿಕೋಬಾರ್ ಸೇರಿದಂತೆ ವಿವಿಧ ಪ್ರದೇಶಗಳ ಚುನಾವಣಾ ವೀಕ್ಷಕರೊಂದಿಗೆ ಚರ್ಚೆ ನಡೆಸಲಾಯಿತು. ಪ್ರತಿಯೊಂದು ಲೋಕಸಭಾ ಕ್ಷೇತ್ರಕ್ಕೂ ನೇಮಿಸಲಾಗಿರುವ ಚುನಾವಣಾ ವೀಕ್ಷಕರನ್ನು ಚುನಾವಣಾ ಸಂಯೋಜಕರು ಮತ್ತು ವಾರ್ ರೂಂಗಳನ್ನು ಸಂಪರ್ಕ ಕೇಂದ್ರಗಳೆಂದು ಮರು ನಾಮಕರಣ ಮಾಡಲಾಗಿದೆ. ಜವಾಬ್ದಾರಿಗಳು ಈ ಮೊದಲೇ ನಿರ್ಧರಿಸಿದಂತೆ ಮುಂದುವರೆಯಲಿದ್ದು, ಹೆಸರು ಮಾತ್ರ ಬದಲಾವಣೆಯಾಗಲಿದೆ ಎಂದು ತಿಳಿಸಲಾಗಿದೆ.
4
+ ಸಂಪರ್ಕ ಕೇಂದ್ರಗಳು ಚುನಾವಣಾ ಸಂಯೋಜಕರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು. ಸಂಯೋಜಕರಿಗೂ ಯಾವುದೇ ರೀತಿಯ ಗೊಂದಲಗಳಾದರೆ ಸಂಪರ್ಕ ಕೇಂದ್ರಗಳ ಮೂಲಕ ಪಕ್ಷದಿಂದ ಸ್ಪಷ್ಟನೆಗಳನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಬೂತ್ ಕಮಿಟಿಗಳ ರಚನೆ, ಪಂಚಾಯಿತಿ ಸಮಿತಿಗಳ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಲಾಗಿದ್ದು, ಯಾವ ರೀತಿಯ ಪ್ರಚಾರ ತಂತ್ರಗಳನ್ನು ಅನುಸರಿಸಬೇಕು, ಅಭ್ಯರ್ಥಿಗಳ ಘೋಷಣೆಯ ಬಳಿಕ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹೈಕಮಾಂಡ್ ಸೂಚನೆ ನೀಡಿದೆ.
5
+ ರಾಷ್ಟ್ರೀಯ ಮಟ್ಟದಲ್ಲಿ ಚುನಾವಣಾ ಸಂಪರ್ಕ ಕೇಂದ್ರಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಶಶಿಕಾಂತ್ ಸೇಂಥಿಲ್ ಸಂಯೋಜಕರಾಗಿದ್ದಾರೆ. ವಿವಿಧ ರಾಜ್ಯಗಳ ಚುನಾವಣಾ ಸಂಯೋಜಕರೊಂದಿಗಿನ ಸಮಾಲೋಚನೆ ಬಳಿಕ ರಾಜ್ಯಸರ್ಕಾರದ ದೂರುಗಳು ಆಗಿರುವ ಚುನಾವಣಾ ಸಮಿತಿ ಸಂಯೋಜಕರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಪ್ರತ್ಯೇಕವಾಗಿ 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.
6
+ ಬಿಜೆಪಿಯ ನಾಯಕರು ಸಾಲುಸಾಲಾಗಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡುತ್ತಿರೋದೇಕೆ..?
7
+ ರಾಜ್ಯ ಸಚಿವರಿಂದ ಹೈಕಮಾಂಡ್ ಏನನ್ನು ನಿರೀಕ್ಷಿಸುತ್ತದೆ ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಕೇವಲ ಕರ್ನಾಟಕಕ್ಕಷ್ಟೇ ಅಲ್ಲ ದಕ್ಷಿಣ ಭಾರತದ ರಾಜ್ಯಗಳಲ್ಲಿನ ಲೋಕಸಭಾ ಕ್ಷೇತ್ರಗಳ ಹೊಣೆಗಾರಿಕೆಯನ್ನೂ ರಾಜ್ಯಸಭಾ ಸಚಿವರಿಗೆ ನೀಡಲಾಗಿದೆ. ಕಳೆದ ಬಾರಿ ಒಂದು ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಕಂಡಿದೆ. ಈ ಬಾರಿ 28 ಕ್ಕೆ 28ನ್ನೂ ಗೆಲ್ಲಬೇಕು. ಇದಕ್ಕೂ ಮೊದಲು 22 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿರುವ ಉದಾಹರಣೆಗಳಿವೆ ಎಂದು ಹೈಕಮಾಂಡ್ ತಿಳಿಸಿದೆ.
8
+ ಪ್ರತಿಯೊಬ್ಬ ಸಚಿವರೂ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಗೆಲ್ಲುವ ಸಾಧ್ಯತೆಗಳಿರುವ ಕಡೆ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡರೆ ಅದಕ್ಕೆ ಚುನಾವಣಾ ಉಸ್ತುವಾರಿ ಯಾದ ಸಂಯೋಜಕರನ್ನೇ ನೇರ ಹೊಣೆ ಮಾಡಲಾಗುವುದು. ಸಚಿವ ಸಂಪುಟದಿಂದ ಕೈಬಿಡುವುದೂ ಸೇರಿದಂತೆ ತಲೆದಂಡದ ಕ್ರಮಗಳು ಅನಿವಾರ್ಯವಾಗಲಿದೆ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರು ನೀಡಿದ್ದಾರೆ.
9
+ ಹೀಗಾಗಿ ಲೋಕಸಭೆ ಚುನಾವಣೆ ರಾಜ್ಯದ ಸಚಿವರ ಪಾಲಿಗೆ ಅಧಿಕಾರದ ಅಳಿವು-ಉಳಿವಿನ ಪ್ರಶ್ನೆಯಾಗಲಿದೆ.ಚುನಾವಣಾ ಅಭ್ಯರ್ಥಿಗಳ ಕುರಿತಂತೆಯೂ ನಿನ್ನೆಯ ಸಭೆಯಲ್ಲಿ ಚರ್ಚೆ ನಡೆದಿದೆ. ಶೀಘ್ರವೇ ಅಭ್ಯರ್ಥಿಗಳನ್ನು ಘೋಷಣೆ ಮಾಡುವಂತೆ ಸಚಿವರ ನಿಯೋಗ ಒತ್ತಾಯಿಸಿದೆ. ಇದಕ್ಕೆ ಸಹಮತಿಸಿರುವ ಹೈಕಮಾಂಡ್ ನಾಯಕರು ಮೂರ್ನಾಲ್ಕು ದಿನಗಳಲ್ಲೇ ರಾಜ್ಯ ಪ್ರದೇಶ ಕಾಂಗ್ರೆಸ್‍ನ ಚುನಾವಣಾ ಸಮಿತಿಯ ಸಭೆ ನಡೆಸಲಾಗುವುದಾಗಿ ಭರವಸೆ ನೀಡಿದ್ದಾರೆ.
10
+ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕರ್ನಾಟಕ ಕಾಂಗ್ರೆಸ್‍ನ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ದು, ಚುನಾವಣಾ ಸಮಿತಿ ಸಭೆ ನಡೆಸಲಿದ್ದಾರೆ. ಅಲ್ಲಿ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಿ ಅಂತಿಮಗೊಳಿಸಲಾಗುವುದು. ಸಂಭವನೀಯರ ಪಟ್ಟಿಯನ್ನು ಎಐಸಿಸಿ ಚುನಾವಣಾ ಸಮಿತಿಗೆ ರವಾನಿಸಲಾಗುವುದು. ಅಲ್ಲಿ ಚರ್ಚೆಗಳು ನಡೆದು ಶೀಘ್ರವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
11
+ ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಹೈಕಮಾಂಡ್‍ಗೆ ಬಿಡುವಂತೆ ರಾಜ್ಯನಾಯಕರಿಗೆ ಸೂಚನೆ ನೀಡಲಾಗಿದೆ. ಸಚಿವರ ಸ್ಪರ್ಧೆಯ ಬಗ್ಗೆ ನಿನ್ನೆಯ ಸಭೆಯಲ್ಲಿ ಯಾವುದೇ ಚರ್ಚೆಗಳಾಗಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
eesanje/url_46_263_11.txt ADDED
@@ -0,0 +1,8 @@
 
 
 
 
 
 
 
 
 
1
+ ಜನರಿಗೆ ಹತ್ತಿರವಾಗುವ ಯೋಜನೆ ನೀಡುವ ಯೋಗ್ಯತೆ ಬಿಜೆಪಿಗಿಲ್ಲ : ಸಚಿವ ಮಧು ಬಂಗಾರಪ್ಪ
2
+ ಶಿವಮೊಗ್ಗ,ಜ.12- ಬಿಜೆಪಿಯವರಿಗೆ ಜನರಿಗೆ ಹತ್ತಿರವಾಗುವ ಒಂದೇ ಒಂದು ಕಾರ್ಯಕ್ರಮ ಮಾಡಲು ಯೋಗ್ಯತೆಯಿಲ್ಲ. ಕಾಂಗ್ರೆಸ್‍ನ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಂತೆ ನಾವು ಭರವಸೆ ಕೊಟ್ಟು ಮಾತು ತಪ್ಪುವುದಿಲ್ಲ. ಪಂಚಖಾತ್ರಿ ಯೋಜನೆಗಳನ್ನು ಅನುಷ್ಠಾನ ಮಾಡದೇ ಇದ್ದರೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಅದನ್ನೇ ದೊಡ್ಡದಾಗಿ ಬಿಂಬಿಸುತ್ತಿದ್ದರು. ಆದರೆ ಈಗ ಅವರಿಗೆ ಯಾವುದೇ ವಿಚಾರಗಳೂ ಸಿಗುತ್ತಿಲ್ಲ. ಅದಕ್ಕಾಗಿ ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
3
+ ಪಂಚಖಾತ್ರಿ ಯೋಜನೆಯಿಂದ ಪ್ರತಿ ಗ್ರಾಮ ಪಂಚಾಯಿತಿಗೆ 8 ಕೋಟಿ ರೂ.ಗಳಷ್ಟು ಹಣ ಹೋಗುತ್ತಿದೆ. ಜನರ ಜೀವನಮಟ್ಟ ಸುಧಾರಣೆಯಾಗಿದೆ. ಇಂತಹ ಒಂದೇ ಒಂದು ಕಾರ್ಯಕ್ರಮವನ್ನು ಬಿಜೆಪಿಯವರಿಂದ ತೋರಿಸಿ ಎಂದರು. ಯಾರದೋ ದುಡ್ಡಲ್ಲಿ ಎಲ್ಲಮ್ಮನ ಜಾತ್ರೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ನಾವು ಎಲ್ಲಮ್ಮನ ಜಾತ್ರೆ ಮಾಡುವುದಿಲ್ಲ, ಮಾರಮ್ಮನ ಹಬ್ಬ ಮಾಡುವುದು ಗೊತ್ತು ಎಂದು ಮಾರ್ಮಿಕವಾಗಿ ಹೇಳಿದರು.
4
+ ರಾಮಮಂದಿರ ಉದ್ಘಾಟನೆಗೆ ಯೋಗಿ ಬಿಟ್ಟರೆ ಬೇರೆ ಯಾವ ಸಿಎಂಗೂ ಇಲ್ಲ ಆಹ್ವಾನ
5
+ ಶಿವಮೊಗ್ಗದಲ್ಲಿ ಯುವನಿ ಯೋಜನೆ ಉದ್ಘಾಟನೆಯ ಕಾರ್ಯಕ್ರಮ ನಡೆಸುವುದು ಹೆಮ್ಮೆಯ ವಿಚಾರ. ಜಿಲ್ಲಾ ಉಸ್ತುವಾರಿ ಸಚಿವನಾಗಿರುವ ನಾನು ಪ್ರಣಾಳಿಕೆ ಸಮಿತಿಯ ಅಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಪಂಚಖಾತ್ರಿ ಯೋಜನೆಗಳ ಬಗ್ಗೆ ಯಾವುದಾದರೂ ಒಂದು ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ನಡೆಸಬೇಕು ಎಂಬ ಅಭಿಲಾಷೆ ಇತ್ತು. ಕೊನೆಯ ಗ್ಯಾರಂಟಿ ಯುವನಿ ಉದ್ಘಾಟನೆ ಇಲ್ಲಿ ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
6
+ ವ್ಯಾಪಕ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಯುವ ಸಮುದಾಯ ಬರುತ್ತಿದೆ. ಅವರ ಸುರಕ್ಷತೆಗಾಗಿ ಕಾಳಜಿ ವಹಿಸುತ್ತೇವೆ. ಹಬ್ಬದ ಮಾದರಿಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಎಂದರು. ನಿನ್ನೆಯವರೆಗೂ ಯುವನಿ ಯೋಜನೆಯಡಿ 67 ಸಾವಿರ ಮಂದಿ ನೋಂದಣಿಯಾಗಿದ್ದಾರೆ. ಇದು ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ. ದಾಖಲಾತಿ ಪರಿಶೀಲನೆ ಎಲ್ಲವೂ ಸಹಜ ಪ್ರಕ್ರಿಯೆ ಎಂದು ಹೇಳಿದರು.
7
+ ಸಿಎಸ್‍ಕೆ ಸ್ಟಾರ್ ಆಲ್ರೌಂಡರ್‌‌ಗೆ ಕೊರೊನಾ ಸೋಂಕು
8
+ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯಸರ್ಕಾರ ಕಷ್ಟಪಡುತ್ತಿದೆ ಎಂದು ಹೇಳುತ್ತಿರುವುದು ಆಧಾರರಹಿತ. ರಾಜ್ಯಸರ್ಕಾರ ಜನಪರವಾಗಿ ಐತಿಹಾಸಿಕ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಬಾಕಿ ಇರುವ ಅಭಿವೃದ್ಧಿ ಕಾಮಗಾರಿ ಕೂಡಾ ಎಂದಿನಂತೆ ಮುಂದುವರೆಯಲಿವೆ ಎಂದ��ು.
eesanje/url_46_263_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕೇಂದ್ರ ಸರ್ಕಾರದ ಸೇವೆಗೆ ಬಲವಂತದ ಶಿಫಾರಸ್ಸು : ಐಎಎಸ್-ಐಪಿಎಸ್ ಅಧಿಕಾರಿಗಳ ಅಸಮಾಧಾನ
2
+ ಬೆಂಗಳೂರು,ಜ.12- ರಾಜ್ಯದ ಕೆಲವು ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳನ್ನು ಕೇಂದ್ರ ಸರ್ಕಾರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕೇಂದ್ರ ಸೇವೆಗೆ ತೆರಳಲು ರಾಜ್ಯದ ಕೆಲವು ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಕರ್ನಾಟಕದಿಂದ ನಾವೇಕೆ ಕೇಂದ್ರ ಸೇವೆಗೆ ಹೋಗಬೇಕು ಎಂಬ ಮೂಲಭೂತ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.
3
+ ನಿಯಮಗಳ ಪ್ರಕಾರ, ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳು ಒಂದು ಬಾರಿ ಆಯಾ ರಾಜ್ಯಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡರೆ ವಿಶೇಷ ಸಂದರ್ಭಗಳಲ್ಲಿ ಮಾತ್ರ ಅವರನ್ನು ಕೇಂದ್ರ ಸೇವೆಗೆ ನಿಯೋಜಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿರುತ್ತದೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ಉದ್ದೇಶಪೂರಕವಾಗಿಯೇ ಕೇಂದ್ರ ಸೇವೆಗೆ ಶಿಫಾರಸ್ಸು ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
4
+ ಕೆಲವು ಅಧಿಕಾರಿಗಳು ಕೇಂದ್ರದ ನಿದೇಶನದಂತೆ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಸರ್ಕಾರದ ಕೆಲವು ಗೌಪ್ಯ ಮಾಹಿತಿಗಳನ್ನು ಕೇಂದ್ರಕ್ಕೆ ರವಾನೆ ಮಾಡುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಒಂದು ಪಕ್ಷದ ಸಿದ್ಧಾಂತದ ಪರವಾಗಿ ಇರುವ ಅಧಿಕಾರಿಗಳನ್ನು ಕೇಂದ್ರಕ್ಕೆ ನಿಯೋಜನೆಗೊಳಿಸಲು ಸರ್ಕಾರ ಮುಂದಾಗಿತ್ತು.
5
+ ಈ ಹಿಂದೆಯೂ ರಾಜ್ಯದ ನೂರಾರು ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳನ್ನು ಕೇಂದ್ರಸರ್ಕಾರದ ಸೇವೆಗೆ ನಿಯೋಜನೆ ಮಾಡಿರುವ ನಿದರ್ಶನಗಳಿವೆ. ದಕ್ಷ ಐಪಿಎಸ್ ಅಧಿಕಾರಿ ಎನಿಸಿದ್ದ ಸೋನಿಯಾ ನಾರಂಗ್ ಪ್ರಸ್ತುತ ಎನ್‍ಐ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೇ ರೀತಿ ಐಎಎಸ್, ಐಪಿಎಸ್, ಐಎಫ್‍ಎಸ್ ಅಧಿಕಾರಿಗಳು ಕೆಲ ಸಂದರ್ಭಗಳಲ್ಲಿ ಕೇಂದ್ರ ಸೇವೆಗೆ ನಿಯೋಜನೆಗೊಳ್ಳುತ್ತಾರೆ.
6
+ ರೊಚ್ಚಿಗೆದ್ದ ಅಮೆರಿಕ-ಬ್ರಿಟನ್, ಹೌತಿ ಬಂಡುಕೋರರ ಮೇಲೆ ಏರ್ ಸ್ಟ್ರೈಕ್
7
+ ಪ್ರಸ್ತುತ ರಾಜ್ಯಸರ್ಕಾರ ಕರ್ನಾಟಕದಲ್ಲಿರುವ ಎಸ್ಪಿ ದರ್ಜೆಯ ಅಕಾರಿಗಳನ್ನು ಕೇಂದ್ರ ಗೃಹ ಇಲಾಖೆ ಕೇಂದ್ರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿಬಂದಿದ್ದು, ತಮ್ಮಲ್ಲಿ ಒಂದು ಮಾತೂ ಕೇಳದೆ ಶಿಫಾರಸ್ಸು ಮಾಡಲಾಗಿದೆ ಎಂದು ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ಇದರ ವಿರುದ್ಧ ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.
8
+ ಅಚ್ಚರಿಯ ವಿಷಯ ಎಂದರೆ ಕೇಂದ್ರ ಗೃಹ ಇಲಾಖೆಯು ಒಟ್ಟು 28 ಎಸ್ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿದ್ದು, ಆ ಪೈಕಿ 26 ಐಪಿಎಸ್ ಅಧಿಕಾರಿಗಳು ಕರ್ನಾಟಕದವರೇ ಆಗಿದ್ದಾರೆ. ಹೀಗಾಗಿ ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿರುವ ಹಿನ್ನೆಲೆ ಡಿಪಿಆರ್ ವಿರುದ್ಧ ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಅಭಿಪ್ರಾಯ ಕೇಳದೆಯೇ ಡಿಪಿಎಆರ್ ಹೆಸರು ಕಳುಹಿಸಿದೆ ಎಂದು ಅತೃಪ್ತಿ ತೋರಿಸಿರುವ ಕೆಲವರು ಶಿಫಾರಸ್ಸನ್ನು ತಿರಸ್ಕರಿಸಲು ನಿರ್ಧಾರ ಮಾಡಿದ್ದಾರೆ.
9
+ ಬೆಂಗಳೂರಿನ ಡಿಸಿಪಿಗಳಾದ ಸಿ.ಕೆ.ಬಾಬಾ, ಎಸ್.ಗಿರೀಶ್, ಡಿ.ದೇವರಾಜ್, ಡಿ.ಆರ್.ಸಿರಿಗೌರಿ, ಅಬ್ದುಲ್ ಅಹದ್, ಅಮೃತ್ ಪ್ರಕಾಶ್ ನಿಖಂ, ಎಸ್ಪಿಗಳಾದ ಇಲಕಿಯಾ ಕರುಣಾಕರನ್, ಡಾ.ಭೀಮಾಶಂಕರ್ ಗುಳೇದ್, ಧರ್ಮೇಂದ್ರ ಕುಮಾರ್ ಮೀನಾ, ಶ್ರೀನಾಥ್ ಮಹದೇವ ಜೋಶಿ ಸೇರಿದಂತೆ ಇತರರನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಲಾಗಿದೆ.
10
+ ಕರ್ನಾಟಕ ಮೂಲದ ಸವಾದ್‍ಗೆ ಇತ್ತು ಪಿಎಫ್‍ಐ ಸಹಾನುಭೂತಿ
11
+ ಈ ಪೈಕಿ ಕೆಲವು ಅಧಿಕಾರಿಗಳು ಶಿಫಾರಸ್ಸನ್ನು ತಿರಸ್ಕರಿಸಲು ನಿರ್ಧಾರ ಮಾಡಿದ್ದು, ಈ ಸಂಬಂಧ ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ. 2012 ರಲ್ಲಿ ಮುಂಬಡ್ತಿ ಪಡೆದಿದ್ದ ಕೆಲ ಕೆಎಸ್‍ಪಿಎಸ್ ಅಧಿಕಾರಿಗಳು ಎರವಲು ಸೇವೆಗೆ ಬಲವಂತವಾಗಿ ಕಳುಹಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
eesanje/url_46_263_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕೋಚಿಮೂಲ್ ನೇಮಕಾತಿ ಅಕ್ರಮ : 10 ಮಂದಿಗೆ ಇಡಿ ನೋಟಿಸ್
2
+ ಬೆಂಗಳೂರು,ಜ.13- ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮಹಾಮಂಡಳಿಯ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ತಿಂಗಳ 16ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಕುಲಸಚಿವರು ಸೇರಿದಂತೆ 10 ಮಂದಿಗೆ ನೋಟಿಸ್ ಜಾರಿ ಮಾಡಿದೆ.
3
+ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ ಇದೇ ತಿಂಗಳ 16ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ಕೂಚಿಮೂಲ್ ಕುಲಸಚಿವರು ಮತ್ತು ಹತ್ತು ಮಂದಿಗೆ ಶನಿವಾರ ನೋಟಿಸ್ ಜಾರಿ ಮಾಡಿದೆ. ವಿವಿಧ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ ತಲಾ 20ರಿಂದ 30 ಲಕ್ಷ ಹಣ ಪಡೆದುಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ಇಡಿ ಸೂಚನೆ ಕೊಟ್ಟಿದೆ.
4
+ ಕಳೆದ ಸೋಮವಾರ ಮತ್ತು ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರ ಕಚೇರಿ, ಮನೆ ಸೇರಿದಂತೆ ಮತ್ತಿತರ ಕಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖಾ ತಂಡ ಸತತವಾಗಿ ಎರಡು ದಿನಗಳ ಕಾಲ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
5
+ ದಾಳಿ ನಡೆದ ಎರಡು ದಿನಗಳ ನಂತರ ಪತ್ರಿಕಾ ಪ್ರಕಟಣೆ ಹೊರಡಿಸಿದ ಇಡಿಯವರು , ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಮನೆ, ಕಚೇರಿ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಕೇಸ್ ದಾಖಲಿಸಿ ಇಡಿ ತನಿಖೆ ಮಾಡುತ್ತಿದೆ.
6
+ 150 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಅಕ್ರಮವಾಗಿ ಹಂಚಿಕೆ ಪ್ರಕರಣ ಸಂಬಂಧ ಶೋಧ ವೇಳೆ 25 ಲಕ್ಷಕ್ಕೂ ಹೆಚ್ಚು ಹಣ, 50 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ ಪತ್ರ ಪತ್ತೆಯಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿ ವೇಳೆ ಡಿಜಿಟಲ್ ಡೇಟಾವನ್ನು ವಶಪಡಿಸಿಕೊಳ್ಳಲಾಗಿತ್ತು. ಅಕ್ರಮ ಹಣ ವರ್ಗಾವಣೆ, ಹಣಕ್ಕಾಗಿ ಉದ್ಯೋಗ ಮಾರಾಟ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಮಾಲೂರು ಶಾಸಕ, ಹಿಂದಿನ ತಹಶೀಲ್ದಾರ್ ನಾಗರಾಜ್ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್‍ನ ಆಧಾರದಲ್ಲಿ ತನಿಖೆ ಮಾಡಲಾಗಿದೆ.
7
+ ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಸಡಗರ
8
+ ಜನವರಿ 8, 9ರಂದು ದಾಳಿ ನಡೆಸಿ ತನಿಖೆ ನಡೆಸಿದ್ದ ಇಡಿ ಅಕಾರಿಗಳು, ಜಿಲ್ಲೆಯ ಮಾಲೂರು ತಾಲೂಕಿನಲ್ಲಿ 150 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಹಂಚಿಕೆ ಮಾಡಿದ ಆರೋಪ ಮಾಡಲಾಗಿತ್ತು. ಒಂದೇ ತಿಂಗಳಲ್ಲಿ 4 ಸಭೆ ನಡೆಸಿ, ನಕಲಿ ದಾಖಲೆ ಸೃಷ್ಟಿಸಿ 80 ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಮಂಜೂರು ಮಾಡಿದ್ದ ಆರೋಪ ಕೇಳಿಬಂದಿತ್ತು. ಈ ಕುರಿತಾಗಿ ಶಾಸಕ ಕೆ.ವೈ.ನಂಜೇಗೌಡರ ವಿರುದ್ದ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
9
+ ರಾಮಮಂದಿರ ಉದ್ಘಾಟನೆ ಬಹಿಷ್ಕ���ಿಸಿರುವುದು ಧರ್ಮಕ್ಕೆ ಧಕ್ಕೆ ತರುವ ಉದ್ದೇಶದಿಂದಲ್ಲ : ಖರ್ಗೆ
10
+ ಕೋಲಾರ ಹಾಲು ಒಕ್ಕೂಟದಲ್ಲಿ ಹೊಸ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ವಿಚಾರವಾಗಿ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಮತ್ತೊಂದು ಪ್ರಕರಣದಲ್ಲಿಯೂ ಹಗರಣ ನಡೆಸಿರುವ ಆರೋಪ ಮಾಡಲಾಗಿದೆ. ಪ್ರತಿ ಉದ್ಯೋಗಕ್ಕೆ 20ರಿಂದ 30 ಲಕ್ಷ ರೂ. ಲಂಚ ಪಡೆದಿರುವ ಆರೋಪ ಮಾಡಲಾಗಿದ್ದು, ಸಂದರ್ಶನದ ಪ್ರಕ್ರಿಯೆ ದುರ್ಬಳಕೆ ಮಾಡಿಕೊಂಡಿರುವ ಮಾಹಿತಿ ಇಡಿಗೆ ಲಭ್ಯವಾಗಿತ್ತು. ಒಕ್ಕೂಟದ ಅಧ್ಯಕ್ಷ ಕೆ.ವೈ ನಂಜೇಗೌಡ ಸೇರಿದಂತೆ ನಾಲ್ಕು ಮಂದಿ ಸದಸ್ಯರ ವಿರುದ್ದ ಆರೋಪ ಕೇಳಿಬಂದಿದ್ದು, ಕೆಲವು ರಾಜಕಾರಣಿಗಳು ಶಿಫಾರಸು ಮಾಡಿದ್ದ 30 ಮಂದಿ ಅಭ್ಯರ್ಥಿಗಳ ಪಟ್ಟಿ ಪತ್ತೆಯಾಗಿತ್ತು.
eesanje/url_46_263_3.txt ADDED
@@ -0,0 +1,6 @@
 
 
 
 
 
 
 
1
+ ಜನಾರ್ಧನ ರೆಡ್ಡಿ ಬಿಜೆಪಿಗೆ ಬಂದರೆ ಅಭ್ಯಂತರವಿಲ್ಲ : ಶ್ರೀರಾಮುಲು
2
+ ಬಳ್ಳಾರಿ,ಜ.13- ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ಧನ ರೆಡ್ಡಿ ಪಕ್ಷಕ್ಕೆ ಬಂದರೆ ನಮ್ಮದೇನು ಅಭ್ಯಂತರವಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ಧನ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆ ಬೇಡವೇ ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ.
3
+ ಒಂದು ವೇಳೆ ಅವರು ಬಂದರೆ ನನ್ನದೇನು ಅಭ್ಯಂತರವಿಲ್ಲ. ಹೃದಯದಿಂದ ಅವರನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು. ನಾನೇಕೆ ಅವರು ಪಕ್ಷಕ್ಕೆ ಬರುವುದನ್ನು ವಿರೋಧಿಸಲಿ, ಪಕ್ಷವನ್ನು ಕಟ್ಟಿ ಬೆಳೆಸಿದವರಲ್ಲಿ ಅವರು ಕೂಡ ಪ್ರಮುಖರು. ಬೇರೆ ಬೇರೆ ಕಾರಣಗಳಿಂದ ಪಕ್ಷ ಬಿಟ್ಟು ಹೋಗಿರಬಹುದು. ಬಿಜೆಪಿಗೆ ಬರಲು ಯಾರೊಬ್ಬರು ವಿರೋಧ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.
4
+ ಶ್ರೀರಾಮುಲು ಅವರನ್ನು ರಾಜಕೀಯವಾಗಿ ಬೆಳೆಸಿದ್ದೇ ನಾನು ಎಂಬ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನ್ನನ್ನು ಕೇವಲ ರಾಜಕೀಯವಾಗಿ ಮಾತ್ರ ಬೆಳೆಸಲಿಲ್ಲ. ನನಗೆ ಅನ್ನ ಕೊಟ್ಟವರು ಅವರೇ ಎಂದು ಭಾವುಕರಾಗಿ ನುಡಿದರು.
5
+ ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಸಡಗರ
6
+ ನನ್ನ ಮೇಲೆ ಜನಾರ್ಧನರೆಡ್ಡಿ ಅವರ ಋಣ ಸಾಕಷ್ಟಿದೆ. ರಾಜಕೀಯವಾಗಿ ನಾನು ಬೆಳೆಯಲು ಅವರೇ ಕಾರಣ. ಒಬ್ಬ ಸಾಮಾನ್ಯನಾಗಿದ್ದ ನನ್ನನ್ನು ಪಕ್ಷಕ್ಕೆ ಕರೆತಂದು ಎಲ್ಲವನ್ನು ಕೊಟ್ಟಿದ್ದಾರೆ. ಟೀಕೆ ಟಿಪ್ಪಣಿಗಳು ಏನೇ ಇದ್ದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ಜನಾರ್ಧನ ರೆಡ್ಡಿ ಅವರ ಬಗ್ಗೆ ಎಂದೂ ಕೂಡ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.
eesanje/url_46_263_4.txt ADDED
@@ -0,0 +1,8 @@
 
 
 
 
 
 
 
 
 
1
+ ಕಾಡುಗೊಲ್ಲ ನಿಗಮ ಸ್ಥಾಪನೆ 20 ಕೋಟಿ ಅನುದಾನ ಬಿಡುಗಡೆ
2
+ ಬೆಂಗಳೂರು. 12, ರಾಜ್ಯ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿಗಾಗಿ ಕಾಡುಗೊಲ್ಲ ನಿಗಮ ಸ್ಥಾಪನೆ ಮಾಡಿದ್ದು ಆ ಸಮುದಾಯದ ಜನತೆ ಉಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕಾಡುಗೊಲ್ಲ ನಿಗಮಕ್ಕೆ 20 ಕೋಟಿ ಹಣ ನೀಡಲಾಗಿದ್ದು ಆ ಹಣವನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಉಪಯೋಗಪಡಿಸಿಕೊಳ್ಳುವಂತೆ ಕರೆನೀಡಿದ್ದಾರೆ .
3
+ ಕಾಡುಗೊಲ್ಲ ನಿಗಮದಡಿ ದೊರೆಯುವ ಸವಲತ್ತುಗಳನ್ನು ಬಳಸಿಕೊಳ್ಳುವ ಸಂಬಂಧ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ ಅವರ ಜೊತೆ ಟಿ.ಬಿ.ಜಯಚಂದ್ರ ಅವರು ವಿಧಾನಸೌಧದಲ್ಲಿ ಮಾತುಕತೆ ನಡೆಸಿದರು.
4
+ ಈ ಸಂದರ್ಭದಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ ಅವರು ಸದ್ಯಕ್ಕೆ ಕಾಡುಗೊಲ್ಲ ನಿಗಮದಲ್ಲಿ 20 ಕೋಟಿ ಹಣವಿದ್ದು ಮೇಕೆ ಕುರಿ ಸಾಕಾಣಿಕೆ ಸೇರಿದಂತೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವವರಿಗೆ ,ಕೊಳವೆ ಬಾವಿ ಹಾಕಿಸಲು ಹಾಗೂ ಶೈಕ್ಷಣಿಕ ಸಾಲ ನೀಡಲು ಹಣವನ್ನ ನೀಡಲಾಗುವುದು‌.
5
+ ಮುಂದಿನ ತಿಂಗಳಲ್ಲಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ರಾಜ್ಯದ ಎಲ್ಲಾ ಗ್ರಾಮ -ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು. ಕಾಡುಗೊಲ್ಲ ಸಮುದಾಯದ ಜನತೆ ಈ ಸೌಲಭ್ಯವನ್ನು ಬಳಸಿಕೊಳ್ಳಲು ಅಗತ್ಯ ಏರ್ಪಾಡುಗಳನ್ನು ಮಾಡಲಾಗಿದೆ ಎಂದು ಇದೆ ವೇಳೆ ತುಳಸಿ,ಮುದ್ದಿನೇನಿ ಅವರು ತಿಳಿಸಿದರು. ಕಾಡುಗೊಲ್ಲ ಜಾತಿ ಪ್ರಮಾಣ ಪತ್ರಗಳನ್ನು ಸಹ ವಿತರಿಸಲಾಗುತ್ತಿದೆ ಎಂದರು
6
+ ತುಮಕೂರು ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ .ಈ ಮೂರು ಜಿಲ್ಲೆಗಳ ಎಲ್ಲಾ ಶಾಸಕರ ಸಭೆ ಕರೆದು ಕಾಡುಗೊಲ್ಲ ನಿಗಮದ ಅಡಿ ಸಿಗುವ ಎಲ್ಲಾ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಟಿವಿ ಜಯಚಂದ್ರ ಅವರು ತಿಳಿಸಿದರು.
7
+ ಇದೇ ವೇಳೆ ಜಯಚಂದ್ರ ಅವರು ಹಿಂದುಳಿದ ವರ್ಗಗಳ ಹಾಗೂ ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಆದಷ್ಟು ಬೇಗ ಈ ಮೂರು ಜಿಲ್ಲೆಗಳ ಶಾಸಕರ ಸಭೆ ಕರೆದು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು. ಜಯಚಂದ್ರ ಅವರ ಮನವಿಗೆ ಸ್ಪಂದಿಸಿದ ಸಚಿವ ಶಿವರಾಜ್ ತಂಗಡಿ ಅವರು ಆದಷ್ಟು ಬೇಗ ಸಭೆ ಕರೆದು ಕಾಡುಗೊಲ್ಲ ಸಮುದಾಯದ ಜನತೆ ಸವಲತ್ತುಗಳನ್ನು ಪಡೆದುಕೊಳ್ಳುವಂತೆ ಅರಿವು ಮೂಡಿಸುವುದಾಗಿ ತಿಳಿಸಿದರು.
8
+ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಕುರಿತು ಸರ್ಕಾರದ ಹಂತದಲ್ಲಿ ಕೆಲಸಗಳು ಆಗುತ್ತಿದೆ ಎಂದು ಇದೇ ವೇಳೆ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನೆ ಅವರು ತಿಳಿಸಿದರು‌.
eesanje/url_46_263_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಕೃಷಿ ಆವಿಷ್ಕಾರಗಳ ಫಲ ರೈತರಿಗೆ ತಲುಪಿಸಲು ಸಕಲ ವ್ಯವಸ್ಥೆ: ಚಲುವರಾಯಸ್ವಾಮಿ
2
+ ನಾಗಮಂಗಲ: ಕೃಷಿ ಕ್ಷೇತ್ರದಲ್ಲಿ ವ್ಯಕ್ತವಾಗುವ ಆವಿಷ್ಕಾರಗಳ ಫಲ ರೈತರಿಗೆ ತಲುಪಲು ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿ ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಜಲಾನಯನ ಅಭಿವೃದ್ದಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ ಮತ್ತು ಜಿಲ್ಲಾ ಪಂಚಾಯಿತಿ ಮಂಡ್ಯ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಕೃಷಿ ಮೇಳ ಮತ್ತು ರೈತ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
3
+ ಶೇ.70 ರಷ್ಟು ಜನರು ಕೃಷಿ ಅವಲಂಬಿತರ ದೇಶ ನಮ್ಮದಾಗಿದೆ, ಬಹುಸಂಖ್ಯೆಯಲ್ಲಿ ಕೃಷಿ ಅವಲಂಭಿಸಿರುವ ರೈತರು ಸಧೃಡರಾಗಬೇಕು, ಆಗ ಕುಟುಂಬ, ಜಿಲ್ಲೆ, ರಾಜ್ಯ ಮತ್ತು ದೇಶ ಸದೃಢವಾಗುತ್ತದೆ ಎಂದರು.  ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ಕೃಷಿ ಕ್ಷೇತ್ರ ಹಾಗೂ ಪರಿಸರದ ಬಗ್ಗೆ ಅನನ್ಯ ಪ್ರೀತಿ ಹೊಂದಿದ್ದರು, ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿರ್ಮಲಾನಂದನಾಥ ಶ್ರೀಗಳು ಕೃಷಿ ಕ್ಷೇತ್ರ ಬಲವರ್ಧನೆಗೆ ಸಹಕಾರಿಯಾಗಲಿ ಎಂಬ ಸದುದ್ದೇಶದಿಂದ ಪ್ರತಿ ವರ್ಷ ಕೃಷಿಮೇಳ, ರೈತ ಸಂಗಮ ಮತ್ತತರ ಕೃಷಿ ಪೂರಕ ಚಟುವಟಿಕೆಗಳನ್ನು ಆಯೋಜಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.
4
+ ಬೆಂಗಳೂರಿನಲ್ಲಿ 3 ದಿನಗಳ ಕಾಲ ಅಂತರಾಷ್ಠೀಯ ಮಟ್ಟದ ಸಿರಿಧಾನ್ಯ ಮೇಳ ಆಯೋಜಿಸಲಾಗಿತ್ತು, ಆ ಮೂಲಕ 150 ಕೋಟಿಗೂ ಮಿಗಿಲಾದ ಸಿರಿಧಾನ್ಯ ರಫ್ತು ಒಪ್ಪಂದಕ್ಕೆ ಸಹಿ ಹಾಕಲಾಗಿದೆ. 50ಕ್ಕೂ ಹೆಚ್ಚು ವಿದೇಶಿ ಪ್ರತಿನಿಧಿಗಳು, 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಲಕ್ಷಾಂತರ ಜನತೆಯಲ್ಲಿ ಸಾವಯವ ಆಹಾರ ಧಾನ್ಯಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.
5
+ ಹೆಣ್ಣು ಮಕ್ಕಳು ಕುಟುಂಬದ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವ ಜಾಣ್ಮೆ ಹೊಂದಿದ್ದಾರೆ, ಅದಕ್ಕೆ ಪೂರಕವಾಗಿ ಸರ್ಕಾರಗಳು ಹೆಣ್ಣು ಮಕ್ಕಳನ್ನು ಪ್ರಬಲರಾಗಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ, ಹೈನುಗಾರಿಕೆ ಹಾಗೂ ಕೃಷಿ ಕಾಯಕದಲ್ಲಿ ಮಹಿಳೆಯರ ಪಾತ್ರ ಅಧಿಕವಾಗಿದೆ ಎಂದು ಗುಣಗಾನ ಮಾಡಿದರು.
6
+ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ಹೆಚ್ಚು ಲಾಭಗಳಿಸಬಹುದಾಗಿದೆ, ಈ ನಿಟ್ಟಿನಲ್ಲಿ ಕೃಷಿ ಇಲಾಖೆಯು ಸಹಾಯಧನ ಹಾಗೂ ಪ್ರೋತ್ಸಾಹಧನಕ್ಕೆ ಹೆಚ್ಚು ಅನುದಾನ ಬಳಕೆ ಮಾಡುತ್ತಿದೆ ಎಂದು ತಿಳಿಸಿದರು. ಕಳೆದ ಸಾಲಿನಲ್ಲಿ ಸುಮಾರು 475 ಕೋಟಿ ರೂ. ಬೆಳೆ ವಿಮೆ ರೈತರ ಖಾತೆಗೆ ಜಮೆ ಆಗಿದೆ. ಬರಗಾಲದ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ 1 ಸಾವಿರ ಕೋಟಿ ಬೆಳೆ ವಿಮೆ ಹಣ ರೈತರಿಗೆ ಸೇರುವ ನಿರೀಕ್ಷೆ ಇದೆ ಎಂದು ವಿವರಿಸಿದರು.
7
+ ಹಳೆ ಮೈಸೂರು ಭಾಗದ ರೈತರು ತಮ್ಮ ಜಮೀನುಗಳನ್ನು ಇಳುವರಿ ಭರ���ತ ಜಮೀನುಗಳನ್ನಾಗಿ ಪರಿವರ್ತಿಸಿ ಅಧಿಕ ಇಳುವರಿಯ ಕಬ್ಬಿನ ಫಸಲು ಬೆಳೆಯುವ ಬೆಳೆ ತಾಂತ್ರಿಕತೆಯ ವಿನಿಮಯಕ್ಕಾಗಿ ಉತ್ತಕ ಕರ್ನಾಟಕ ಭಾಗಕ್ಕೆ ಅಧ್ಯಯನ ಪ್ರವಾಸ ಆಯೋಜಿಸಲಾಗುವುದು ಎಂದು ತಿಳಿಸಿದರು. ಪ್ರತಿಯೊಂದು ಕೃಷಿಕರ ಕುಟುಂಬವು ಸಮಗ್ರ ಕೃಷಿಗೆ ಒತ್ತು ನೀಡಬೇಕು, ಇತರೆ ವೃತ್ತಿಯೊಂದಿಗೆ ಕೃಷಿಯನ್ನು ಪೋಷಿಸುವ ಹೊಣೆಗಾರಿಕೆ ಹೊಂದಬೇಕೆಂದು ತಿಳಿಸಿದರು.
8
+ ರಾಜ್ಯ ಕೃಷಿ ಆಯುಕ್ತಾಲಯದ ಆಯಕ್ತ ವೈ.ಎಸ್.ಪಾಟೀಲ್ ಮಾತನಾಡಿ, ಶಿಕ್ಷಣ, ಆರೋಗ್ಯ, ಧಾರ್ಮಿಕ ಸೇವೆಯ ಜೊತೆಗೆ ರೈತ ಸಂಗಮ ಆಯೋಜಿಸುವ  ಮೂಲಕ ರಾಜ್ಯದ ಉತ್ತರ ಹಾಗೂ ದಕ್ಷಿಣ ಭಾಗದ ಸಮ್ಮಿಲನಕ್ಕೆ ವೇದಿಕೆ ಸೃಷ್ಠಿಸಿ, ಕೃಷಿ ಚಟುವಟಿಕೆಗಳ ವಿಲೀನಕ್ಕೆ ನಾಂದಿಯಾಡಿರುವ ಶ್ರೀಗಳ ದೂರದೃಷ್ಟಿಯನ್ನು ಬಣ್ಣಿಸಿದರು.
9
+ ಜನರಿಗೆ ಹತ್ತಿರವಾಗುವ ಯೋಜನೆ ನೀಡುವ ಯೋಗ್ಯತೆ ಬಿಜೆಪಿಗಿಲ್ಲ : ಸಚಿವ ಮಧು ಬಂಗಾರಪ್ಪ
10
+ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಸ್ವಾಮೀಜಿ ವಹಿಸಿದ್ದರು. ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಜಿಕೆವಿಕೆ ಕುಲಪತಿ ಡಾ.ಎಸ್.ಬಿ.ಸುರೇಶ್, ಕೃಷಿ ಇಲಾಖೆಗೆ ನಿರ್ದೇಶಕ ಜಿ.ವಿ.ಪುತ್ರ, ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಂ.ಎಚ್.ಪದ್ಮನಾಭ್, ವೈಭವ್ ಉಪಸ್ಥಿತರಿದ್ದರು.
11
+ ಜಿಲ್ಲಾಧಿಕಾರಿ ಡಾ.ಕುಮಾರ ಸರ್ವರನ್ನು ಸ್ವಾಗತಿಸಿ, ರೈತರು ದೇಶದ ಆಧಾನ ಸ್ಥಂಭ ಹಾಗೂ ಶಕ್ತಿಯಾಗಿದ್ದು, ರೈತ ಮತ್ತು ಕೃಷಿ ಕ್ಷೇತ್ರವನ್ನು ಉತ್ತೇಜಿಸಬೇಕಾದ ಹೊಣೆಗಾರಿಕೆ ನಮ್ಮಲ್ಲರದ್ದಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಜಿ.ಪಂ. ಸಿಇಓ ಶೇಖ್ ತನ್ವೀರ್ ಆಸಿಫ್, ಎಸ್ಪಿ ಎನ್.ಯತೀಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್, ಉಪ ನಿರ್ದೇಶಕಿಯರಾದ ಡಾ.ಮಾಲತಿ,ಮಮತ ಇತರರರು ಉಪಸ್ಥಿತರಿದ್ದರು
eesanje/url_46_263_6.txt ADDED
@@ -0,0 +1,9 @@
 
 
 
 
 
 
 
 
 
 
1
+ ರೂಪಾ-ಸಿಂಧೂರಿ ಪ್ರಕರಣ : ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಿ ಎಂದ ಸುಪ್ರೀಂ
2
+ ನವದೆಹಲಿ,ಜ.12- ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪ ಪ್ರಕರಣವನ್ನು ಒಂದು ತಿಂಗಳೊಳಗೆ ಸೌಹಾರ್ದಯುತವಾಗಿ ಇಬ್ಬರೂ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸಲಹೆ ಮಾಡಿದೆ. ಇಬ್ಬರೂ ಅಧಿಕಾರಿಗಳು ಉನ್ನತ ಸ್ಥಾನಮಾನದಲ್ಲಿದ್ದೀರಿ. ನಿಮಗೆ ಉಜ್ವಲ ಭವಿಷ್ಯವಿದೆ. ಯೋಚಿಸಿ ಆಲೋಚನೆ ಮಾಡಿ. ಹಠದಿಂದ ಏನನ್ನೂ ಸಧಿಸಲು ಸಾಧ್ಯವಿಲ್ಲ. ನಿಮ್ಮಿಬ್ಬರಿಗೂ ಒಂದು ತಿಂಗಳು ಕಾಲಾವಕಾಶ ನೀಡಲಾಗುತ್ತದೆ. ಅಷ್ಟರೊಳಗೆ ವಿವಾದವನ್ನು ಸುಖಾಂತ್ಯಗೊಳಿಸಿ ಎಂದು ನ್ಯಾಯಾಲಯ ಸೂಚನೆ ನೀಡಿದೆ.
3
+ ಆದರೆ ನ್ಯಾಯಾಲಯದ ಮನವಿಯನ್ನು ಒಪ್ಪದ ರೋಹಿಣಿ ಸಿಂಧೂರಿ ನನ್ನ ವಿರುದ್ಧ ಮಾನಹಾನಿ ಪೋಸ್ಟ್ ಮಾಡಿರುವ ಡಿ.ರೂಪಾ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದ್ದರಿಂದ ಅರ್ಜಿ ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಲಾಯಿತು. ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಓ.ಕಾ ಅವರಿದ್ದ ಏಕಸದಸ್ಯ ಪೀಠ, ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳೇ ಪರಸ್ಪರ ಹೀಗೆ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದರೆ ಸಾರ್ವಜನಿಕರಿಗೆ ನೀವು ಕೊಡುವ ಸಂದೇಶವಾದರೂ ಏನು ಎಂದು ಪ್ರಶ್ನೆ ಮಾಡಿತು.
4
+ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಿ ಎಂದು ಸೂಚನೆ ನೀಡಿದರೂ ಪರಸ್ಪರ ಜಿದ್ದಿಗೆ ಬಿದ್ದವರಂತೆ ಪರಸ್ಪರ ಆರೋಪಗಳನ್ನು ಮಾಡಿಕೊಳ್ಳುತ್ತಿದ್ದೀರಿ ನಿಮ್ಮಿಬ್ಬರಿಗೂ ಒಳ್ಳೆಯ ಭವಿಷ್ಯವಿದೆ. ನ್ಯಾಯಾಲಯದ ಆಚೆಗೂ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಹಿತದೃಷ್ಟಿಯಿಂದ ಈ ಮಾತನ್ನು ಹೇಳುತ್ತಿದ್ದೇನೆ ಎಂದು ನ್ಯಾಯಾೀಧಿಶರು ಕಿವಿಮಾತು ಹೇಳಿದರು.
5
+ ಆಘಾತವಾಗಿದೆ:ಇದಕ್ಕೆ ರೋಹಿಣಿ ಸಿಂಧೂರಿ ಪರ ವಕೀಲರು, ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆಕ್ಷೇಪಾರ್ಹ ಪೋಸ್ಟ್‍ಗಳನ್ನು ತೆಗೆದು ಹಾಕಬಹುದು, ಇಲ್ಲವೇ ಡಿಲೀಟ್ ಮಾಡಬಹುದು. ಆದರೆ ಅವರ ಕುಟುಂಬಕ್ಕೆ ಆಗಿರುವ ಮಾನಹಾನಿಯನ್ನು ಯಾರು ಸರಿಪಡಿಸುತ್ತಾರೆ. ಡಿ.ರೂಪ ಪೋಸ್ಟ್ ಮಾಡಿದ ನಂತರ ಅವರ ಕುಟುಂಬ ಘಾಸಿಗೊಳಗಾಗಿದೆ. ಉನ್ನತ ಸ್ಥಾನದಲ್ಲಿರುವವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಮೌನವನ್ನೇ ದೌರ್ಬಲ್ಯವೆಂದು ಭಾವಿಸಬಾರದು. ಇನ್ನು ಕೂಡ ನಾವು ಮೌನವಾಗಿರಲು ಸಾಧ್ಯವೇ? ನ್ಯಾಯಾಲಯ ನೀಡುವ ತೀರ್ಪಿಗೆ ನಾವು ತಲೆ ಬಾಗುತ್ತೇವೆ. ಅದಕ್ಕೂ ಮುನ್ನ ನನ್ನ ವಿರುದ್ಧ ಪೋಸ್ಟ್ ಮಾಡಿರುವುದಕ್ಕೆ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು.
6
+ ಬಿಜೆಪಿಯ ನಾಯಕರು ಸಾಲುಸಾಲಾಗಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡುತ್ತಿರೋದೇಕೆ..?
7
+ ಅವರಿಂದಲೂ ಹಾನಿಯಾಗಿದೆ:ಇನ್ನು ಡಿ.ರೂಪ ಪರ ವಾದ ಮಂಡಿಸಿದ ವಕೀಲರು ರೋಹಿಣಿ ಸಿಂಧೂರಿ ಕೂಡ ನಮ್ಮ ಪಿರಿಯಾದುದಾರರಿಗೆ ಮಾನಹಾನಿಯಾಗುವಂತೆ ಟೀಕಿಸಿದ್ದಾರೆ. ಅವರಿಗೆ ಬುದ್ದಿ ಭ್ರಮಣೆಯಾಗಿದೆ ಎಂದು ಹೇಳಿರುವುದು ಮಾಧ್ಯಮದಲ್ಲಿ ಪ್ರಕಟಗೊಂಡಿದೆ. ಅವಹೇಳನಕಾರಿಯಾಗಿ ಮಾತನಾಡಿರುವಾಗ ಕ್ಷಮೆಯನ್ನು ಏಕೆ ಕೇಳಬೇಕು ಎಂದರು. ನ್ಯಾಯಾಲಯದ ನಿರ್ದೇಶನದಂತೆ ಸಾಮಾಜಿಕ ಜಾಲತಾಣದಿಂದ ಮಾಡಿದ್ದ ಪೋಸ್ಟ್‍ನ್ನು ಡಿಲೀಟ್ ಮಾಡಲಾಗಿತ್ತು. ಆದರೆ ಅರ್ಜಿದಾರರು ಪುನಃ ನಮ್ಮ ಮೇಲೆ ಆರೋಪಗಳನ್ನು ಮುಂದುವರೆಸಿದ್ದಾರೆ. ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.ಎರಡು ಕಡೆ ವಾದ-ವಿವಾದ ಆಲಿಸಿದ ನ್ಯಾಯಪೀಠ ಒಂದು ತಿಂಗಳ ಕಾಲಾವಕಾಶ ನೀಡಿ ಮಾ.15ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು.
8
+ ಏನಿದು ಆಕ್ಷೇಪಾರ್ಹ ಪೋಸ್ಟ್?:2023ರ ಫೆಬ್ರುವರಿಯಲ್ಲಿ ಡಿ. ರೂಪಾ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಹಲವು ಆರೋಪ ಮಾಡಿದ್ದರು. ಈ ಆರೋಪಗಳು ಕೀಳು ಅಭಿರುಚಿಯಿಂದ ಕೂಡಿದ್ದವು ಎಂದು ಆಕ್ರೋಶ ವ್ಯಕ್ತಪಡಿಸಿದ್ದ ರೋಹಿಣಿ ಸಿಂಧೂರಿ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಮೊಕದ್ದಮೆಯನ್ನು ರದ್ದುಪಡಿಸಬೇಕೆಂದು ಕೋರಿ ಡಿ. ರೂಪಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
9
+ 2023ರ ಫೆಬ್ರುವರಿ 14 ಹಾಗೂ 16 ರಂದು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ತಮ್ಮ ಪರಿಶೀಲಿಸಿದ ಫೇಸ್ಬುಕ್ ಖಾತೆಯಲ್ಲಿ ಐಎಎಸ್ ಅಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹಲವು ಆರೋಪಗಳನ್ನ ಮಾಡಿದ್ದರು. ಈ ಆರೋಪಗಳು ಕೀಳು ಅಭಿರುಚಿಯಿಂದ ಕೂಡಿದ್ದವು ಎಂದು ಆಕ್ರೋಶ ವ್ಯಕ್ತಪಡಿಸಿದ್ದ ರೋಹಿಣಿ ಸಿಂಧೂರಿ ಈ ಕುರಿತಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲು ಮಾಡಿದ್ದ ರೋಹಿಣಿ ಸಿಂಧೂರಿ, 1 ಕೋಟಿ ರೂಪಾಯಿ ಪರಿಹಾರವನ್ನು ಡಿ. ರೂಪಾ ಅವರಿಂದ ವಸೂಲಿ ಮಾಡಿಕೊಡಿಸಬೇಕು ಎಂದು ಮನವಿ ಮಾಡಿದ್ದರು.
eesanje/url_46_263_7.txt ADDED
@@ -0,0 +1,6 @@
 
 
 
 
 
 
 
1
+ ವಾಟ್ಸಾಪ್ ನಲ್ಲಿ ಹುಡುಗಿಯ ಭಾವಚಿತ್ರ ಬಳಸಿ ಲೈಂಗಿಕ ವಂಚನೆ : ಆರೋಪಿ ಸೆರೆ
2
+ ಬೆಂಗಳೂರು, ಜ.12- ಹುಡುಗಿಯ ಭಾವಚಿತ್ರವನ್ನು ಬಳಕೆ ಮಾಡಿಕೊಂಡು ವ್ಯಾಟ್ಸ್ ಆಫ್ ಮೂಲಕ ಲೈಂಗಿಕ ವಂಚನೆ ಕೃತ್ಯವೆಸಗುತ್ತಿದ್ದ ದಾವಣಗೆರೆ ಮೂಲದ ಯುವಕನನ್ನು ಉತ್ತರ ವಿಭಾಗದ ಸಿ.ಇ.ಎನ್. ಕ್ರೈಂ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಮೂಲದ ನರಹರಿ (27) ಬಂಧಿತ ವಂಚಕ. ಈತ ಬೊಮ್ಮನಹಳ್ಳಿಯ ಲಾಡ್ಜೊವೊಂದರಲ್ಲಿ ರೂಮ್ ಬಾಯ್ ಆಗಿ ಕೆಲಸ ಮಾಡುತ್ತಿದ್ದನು.
3
+ ವ್ಯಕ್ತಿಯೊಬ್ಬರು ಕೆನರಾ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಯಾರೋ ಅಪರಿಚಿತರು ಹುಡುಗಿ ಹೆಸರಿನಲ್ಲಿ ಒಂದು ಮೊಬೈಲ್ ನಂಬರಿನ ಮೂಲಕ ಅವರನ್ನು ಸಂಪರ್ಕಿಸಿರುತ್ತಾರೆ. ಈ ರೀತಿ ಒಂದು ತಿಂಗಳಿನಿಂದ ಆ ವ್ಯಕ್ತಿಗೆ ಕರೆ ಮಾಡಿ ಅನೈತಿಕ ಸಂಬಂಧದ ಸಂದೇಶವನ್ನು ಕಳುಹಿಸಿ ನಂತರ ಅನೈತಿಕ ಸಂಬಂಧದಲ್ಲಿರುವ ಸಂದೇಶಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ, ಅವರಿಂದ ಹಂತ ಹಂತವಾಗಿ 1.10 ಲಕ್ಷ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದು, ಈ ಬಗ್ಗೆ ಆ ವ್ಯಕ್ತಿ ದೂರು ನೀಡಿದ್ದರು.
4
+ ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ : ಬೊಮ್ಮಾಯಿ
5
+ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಉತ್ತರ ವಿಭಾಗದ ಸೆನ್ ಠಾಣೆ ಪೊಲೀಸರು ವಂಚಕನ್ನೊಬ್ಬ ಹುಡುಗಿ ಹೆಸರಿನಲ್ಲಿ ನಕಲಿ ವ್ಯಾಟ್ಸ್‍ಆಪ್ ಖಾತೆಯನ್ನು ಕ್ರಿಯೇಟ್ ಮಾಡಿರುವುದನ್ನು ಖಚಿತ ಪಡಿಸಿಕೊಂಡಿರುತ್ತಾರೆ. ಆ ಖಾತೆಗೆ ಹುಡುಗಿಯ ಭಾವಚಿತ್ರವನ್ನು ಬಳಕೆ ಮಾಡಿಕೊಂಡು ದೂರುದಾರ ವ್ಯಕ್ತಿಗೆ ಹುಡುಗಿಯರು ಚಾಟ್ ಮಾಡುವ ರೀತಿಯಲ್ಲಿ ಚಾಟ್ ಮಾಡಿ, ಆತನ ಫೋಟೋಗಳನ್ನು ಸಂಗ್ರಹಣೆ ಮಾಡಿಕೊಂಡು ನಂತರ ಆತನ ಫೋಟೋವನ್ನು ಮಾರ್ಫ್ ಮಾಡಿ, ಹಣಕ್ಕಾಗಿ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾರ್ಫ್ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹೆದರಿಸಿ, ಹಣ ವಸೂಲಿ ಮಾಡಿರುವುದು ಗೊತ್ತಾಗಿದೆ.
6
+ ವಸೂಲಿ ಮಾಡಿದ ಹಣವನ್ನು ಸ್ನೇಹಿತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ಆ ನಂತರ ಎಟಿಎಂ ಮೂಲಕ ಡ್ರಾ ಮಾಡಿಕೊಂಡು ವಿಲಾಸಿ ಜೀವನ ನಡೆಸುತ್ತಿರುತ್ತಾನೆ. ಈ ರೀತಿ ವಿವಿಧ ಬ್ಯಾಂಕ್ ಖಾತೆಗಳಲ್ಲಿ ನಡೆದ ಹಣಕಾಸಿನ ವಹಿವಾಟಿನಿಂದ ಹಾಗೂ ತಾಂತ್ರಿಕ ಮಾಹಿತಿಯನ್ನಾಧರಿಸಿ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
eesanje/url_46_263_8.txt ADDED
@@ -0,0 +1,6 @@
 
 
 
 
 
 
 
1
+ ದೇಶದಲ್ಲೇ ಪ್ರಪ್ರಥಮ ಬಾರಿಗೆ ಕಾಯ್ದೆ ಚಲಾಯಿಸಿದ ಸಿಸಿಬಿ ಅಧಿಕಾರಿಗಳು
2
+ ಬೆಂಗಳೂರು, ಜ.12- ರಾಷ್ಟ್ರದಲ್ಲೇ ಪ್ರಪ್ರಥಮ ಬಾರಿಗೆ ಎನ್.ಡಿ.ಪಿ.ಎಸ್ ಕಾಯ್ದೆಯ ಅಧಿಕಾರವನ್ನು ಚಲಾಯಿಸಿದ ಸಿಸಿಬಿ ಅಧಿಕಾರಿಗಳು ವಿದೇಶಿ ಡ್ರಗ್ ಪೆಡ್ಲರ್ ಅಕ್ರಮವಾಗಿ ಗಳಿಸಿದ್ದ 12 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಕಳೆದ ನವೆಂಬರ್‍ನಲ್ಲಿ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದ ಆರೋಪಿಯು ರೂಢಿಗತ ವಿದೇಶಿ ಡ್ರಗ್ ಪೆಡ್ಲರ್ ಆಗಿರುತ್ತಾನೆ.
3
+ ಆತನ ಬಳಿ ಹಣ ಮತ್ತು ವಿವಿಧ ಬ್ಯಾಂಕ್‍ಗಳ ಪಾಸ್‍ಬುಕ್, ಡೆಬಿಟ್ ಕಾರ್ಡ್‍ಗಳು ಇರುವ ಬಗ್ಗೆ ಮಾಹಿತಿಯನ್ನು ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಸಂಗ್ರಹಿಸಿದ್ದರು. ಈ ಕುರಿತು ಪ್ರಕರಣದ ತನಿಖೆಯನ್ನು ಮುಂದುವರಿಸಿ ತನಿಖಾ ಕಾಲದಲ್ಲಿ ವಿದೇಶಿ ಡ್ರಗ್ ಪೆಡ್ಲರ್‍ನ ಪತ್ನಿಯ ಎರಡು ಬ್ಯಾಂಕ್ ಖಾತೆಯಿಂದ 2.55 ಲಕ್ಷ ಹಣ ಹಾಗೂ ಇತರೆ ಹೆಸರಿನಲ್ಲಿದ್ದ 5 ಬ್ಯಾಂಕ್ ಖಾತೆಗಳಲ್ಲಿದ್ದ 4.90 ಲಕ್ಷ ರೂ. ಹಣದ ವಿವರಗಳನ್ನು ತನಿಖೆಯಿಂದ ಖಚಿತಪಡಿಸಿಕೊಂಡಿದ್ದಾರೆ.
4
+ ಎನ್.ಡಿ.ಪಿ.ಎಸ್ ಕಾಯ್ದೆಯಡಿ ತನಿಖಾಕಾಧಿರಿಗಳಿಗಿರುವ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಗದು ಹಣ ಮತ್ತು 7 ಬ್ಯಾಂಕ್ ಖಾತೆಗಳಲ್ಲಿ ಹೊಂದಿದ್ದ ಒಟ್ಟು 12,60,282 ರೂ. ಹಣವನ್ನು ಮುಟ್ಟುಗೋಲು ಹಾಕಿಕೊಂಡು ಆದೇಶ ಹೊರಡಿಸಿರುತ್ತಾರೆ. ವಿದೇಶಿ ಡ್ರಗ್ ಪೆಡ್ಲರ್ 2018ರಲ್ಲಿ ಭಾರತಕ್ಕೆ ವೈದ್ಯಕೀಯ ವೀಸಾದಲ್ಲಿ ಬಂದಿದ್ದು, 2022ರಲ್ಲಿ ಮಣಿಪುರ ರಾಜ್ಯದ ಯುವತಿಯನ್ನು ಮದುವೆಯಾಗಿರುತ್ತಾನೆ.
5
+ ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ : ಬೊಮ್ಮಾಯಿ
6
+ ತದನಂತರದಲ್ಲಿ ಆಕೆಯ ಹೆಸರಿನಲ್ಲಿ ನಗರದಲ್ಲಿ ಎರಡು ಬ್ಯಾಂಕ್ ಖಾತೆಗಳನ್ನು ಹಾಗೂ ನಕಲಿ ದಾಖಲಾತಿಗಳನ್ನು ನೀಡಿ ಇತರರ ಹೆಸರಿನಲ್ಲಿ ಐದು ಬ್ಯಾಂಕ್ ಖಾತೆಗಳು ಸೇರಿದಂತೆ ಒಟ್ಟು ಏಳು ಬ್ಯಾಂಕ್ ಖಾತೆಗಳನ್ನು ಹೊಂದಿರುತ್ತಾನೆ. ಈ ಖಾತೆಗಳಿಂದ ಗೂಗಲ್ ಪೇ ಪೋನ್ ಪೇ ಮೂಲಕ ಡ್ರಗ್ ಪೆಡ್ಲಿಂಗ್ ಹಣದ ವಹಿವಾಟನ್ನು ನಿರ್ವಹಿಸುತ್ತಿದ್ದ ಅಂಶಗಳು ತನಿಖೆಯಿಂದ ತಿಳಿದು ಬಂದಿರುತ್ತದೆ.
eesanje/url_46_263_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಶಿವಮೊಗ್ಗದಲ್ಲಿ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ
2
+ ಬೆಂಗಳೂರು,ಜ.12- ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚಖಾತ್ರಿ ಯೋಜನೆಗಳ ಪೈಕಿ ಕೊನೆಯದಾದ ಯುವನಿಧಿಗೆ ಇಂದಿನಿಂದ ಚಾಲನೆ ನೀಡಲಾಗಿದೆ. ಸ್ವಾಮಿ ವಿವೇಕಾನಂದರ 161 ನೇ ಜಯಂತಿ ಪ್ರಯುಕ್ತ ಶಿವಮೊಗ್ಗದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು. ಈ ಮೂಲಕ ವಿಧಾನಸಭೆ ಚುನಾವಣೆಗೂ ಮೊದಲು ನೀಡಿದ್ದ ಪ್ರಮುಖ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ.
3
+ ಈ ಮೊದಲು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿತ್ತು. ಪದವಿ ಅಥವಾ ಡಿಫ್ಲೋಮಾ ಪಡೆದ ಬಳಿಕ 6 ತಿಂಗಳವರೆಗೂ ಉದ್ಯೋಗ ದೊರೆಯದೇ ಇದ್ದವರಿಗೆ 2 ವರ್ಷಗಳ ಕಾಲ ನಿರುದ್ಯೋಗ ಭತ್ಯೆ ನೀಡುವುದು ಯುವನಿ ಯೋಜನೆಯ ಮುಖ್ಯ ಉದ್ದೇಶ.ಪದವಿಧರರಿಗೆ 3,000, ಡಿಫ್ಲೋಮಾದಾರರಿಗೆ 1,500 ರೂ. ಭತ್ಯೆ ನೀಡುವುದಾಗಿ ಚುನಾವಣೆಗೂ ಮೊದಲೇ ಘೋಷಣೆ ಮಾಡಲಾಗಿತ್ತು.
4
+ ಅದರ ಪ್ರಕಾರ ಸರ್ಕಾರ ರಚನೆಯಾದ 7 ತಿಂಗಳು ಕಳೆದ ಬಳಿಕ ಮತ್ತು ಪದವಿ, ಡಿಫ್ಲೋಮಾ ಪರೀಕ್ಷೆಗಳು ಮುಗಿದ 6 ತಿಂಗಳ ನಂತರ ಯೋಜನೆ ಜಾರಿಗೆ ಚಾಲನೆ ನೀಡಲಾಗಿದೆ. ಕಳೆದ ಡಿಸೆಂಬರ್ 26 ರಂದು ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಲಾಯಿತು. ರಾಜ್ಯದಲ್ಲಿ 2022-23 ನೇ ಸಾಲಿನಲ್ಲಿ 5.29 ಲಕ್ಷ ಮಂದಿ ಪದವಿ ಹಾಗೂ ಡಿಫ್ಲೋಮಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
5
+ ಅವರಲ್ಲಿ ನಿರುದ್ಯೋಗಿಗಳಾಗಿರುವವರು ಯುವನಿಧಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು.ನಿನ್ನೆಯವರೆಗೂ ಸುಮಾರು 66 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ ಒಟ್ಟು ಫಲಾನುಭವಿಗಳ ಪೈಕಿ ಶೇ.12 ರಷ್ಟು ಮಾತ್ರ ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನುಳಿದಂತೆ ಪದವೀಧರರಲ್ಲಿ ಯುವನಿಧಿ ಯೋಜನೆ ಬಗ್ಗೆ ನಿರಾಸಕ್ತಿ ಅಥವಾ ಉದ್ಯೋಗ ದೊರೆತಿರುವ ಸಾಧ್ಯತೆಗಳಿವೆ.
6
+ ಯುವನಿಧಿ ಯೋಜನೆಯ ಚಾಲನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಬಹುತೇಕ ಸಚಿವರು ಶಿವಮೊಗ್ಗದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುಮಾರು 1 ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ಸಮಾವೇಶಗೊಳಿಸುವ ನಿಟ್ಟಿನಲ್ಲಿ ತಯಾರಿಗಳಾಗಿದ್ದವು. ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಆಯೋಜಿಸಲಾಗಿತ್ತು.
7
+ ಸಂಚಾರದಟ್ಟಣೆ ಮತ್ತು ಅದರಿಂದ ವಿದ್ಯಾರ್ಥಿಗಳಿಗೆ ಆಗುವ ಕಿರಿಕಿರಿಯನ್ನು ತಪ್ಪಿಸಲು ಶಾಲಾ-ಕಾಲೇಜುಗಳ ಸಮಯವನ್ನು 9 ರಿಂದ 4 ಗಂಟೆಯವರೆಗೂ ಬದಲಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯಸರ್ಕಾರ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್��ಲು ಅಡ್ಡಿಯಿಲ್ಲದಂತೆ ಪಂಚಖಾತ್ರಿಗಳನ್ನು ಜಾರಿಗೊಳಿಸಿದೆ.
8
+ ವಿಧಾನಸಭೆ ಚುನಾವಣೆಯಲ್ಲಿ ಪಂಚಖಾತ್ರಿಗಳು ಪ್ರಮುಖ ಪಾತ್ರ ವಹಿಸಿದ್ದವು ಎಂಬ ವಿಶ್ಲೇಷಣೆಯಿದೆ. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಕಾಂಗ್ರೆಸ್‍ನ ಭರವಸೆಗಳ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು.ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ನೋಡಿದರೆ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸುವುದು ಅಸಾಧ್ಯ ಎಂಬ ಅಭಿಪ್ರಾಯಗಳು ಕೇಳಿಬಂದಿದ್ದವು. ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರವನ್ನು ಟೀಕಿಸಿ ಪಂಚಖಾತ್ರಿ ಯೋಜನೆಗಳ ಜಾರಿಯಿಂದ ಆರ್ಥಿಕ ಆರೋಗ್ಯ ಹದಗೆಡಲಿದೆ ಎಂದು ಲೇವಡಿ ಮಾಡಿದರು.
9
+ ಬಿಜೆಪಿಯು ಕಾಂಗ್ರೆಸ್‍ನ ಗ್ಯಾರಂಟಿಗಳನ್ನು ಆರಂಭದಲ್ಲಿ ಟೀಕಿಸಿತ್ತು. ಅನಂತರ ಸಮರ್ಪಕ ಅನುಷ್ಠಾನ ಮಾಡಲಾಗುತ್ತಿಲ್ಲ ಎಂಬ ಆರೋಪ ಮಾಡಲಾರಂಭಿಸಿತ್ತು. ಪಂಚಖಾತ್ರಿ ಯೋಜನೆಗಳ ಬಗ್ಗೆ ಜನರ ಒಲವು ಹೆಚ್ಚಾಗುತ್ತಿದ್ದಂತೆ ಯೂಟರ್ನ್ ಪಡೆದ ಬಿಜೆಪಿ ರಾಷ್ಟ್ರಮಟ್ಟದಲ್ಲಿ ಮೋದಿ ಗ್ಯಾರಂಟಿ ಎಂಬ ಘೋಷಣೆಯೊಂದಿಗೆ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದೆ.
10
+ ಕೇಂದ್ರ ಸರ್ಕಾರದ ಯೋಜನೆಗಳನ್ನು ಮೋದಿ ಗ್ಯಾರಂಟಿ ಎಂದು ಬಿಂಬಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇನ್ನಿತರ ಕಾಂಗ್ರೆಸಿಗರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿ ವಿರುದ್ಧ ವಿಡಂಬನಾತ್ಮಕ ಟೀಕೆಗಳನ್ನು ಮಾಡಲಾರಂಭಿಸಿದ್ದಾರೆ.
eesanje/url_46_264_1.txt ADDED
@@ -0,0 +1,7 @@
 
 
 
 
 
 
 
 
1
+ ನಾಳೆ ಕೆ-ಸೆಟ್ ಪರೀಕ್ಷೆ, ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ
2
+ ಬೆಂಗಳೂರು, ಜ.12- ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನಾಳೆ ನಡೆಯಲಿದ್ದು, ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿವಿಧ 41 ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 1,17,302 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
3
+ ಬೆಂಗಳೂರು ನಗರ, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮ ಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10ರಿಂದ 11 ಗಂಟೆವರೆಗೆ ಎಲ್ಲ ವಿಷಯಗಳ ಅಭ್ಯರ್ಥಿಗಳಿಗೆ ಸಾಮಾನ್ಯ ಪರೀಕ್ಷೆ (ಪೇಪರ್-1) ಇರುತ್ತದೆ. ನಂತರ ಅದೇ ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪರೀಕ್ಷೆ (ಪೇಪರ್-2) ನಡೆಯಲಿದೆ. ಅದು ಮಧ್ಯಾಹ್ನ 12ರಿಂದ 2.00ರವರೆಗೆ ಇರುತ್ತದೆ. ಒಮ್ಮೆ ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗಳು ಪ್ರವೇಶಿಸಿದ ಮೇಲೆ ಎರಡೂ ಪತ್ರಿಕೆಗಳ ಪರೀಕ್ಷೆ ಮುಗಿದ ನಂತರವೇ ಹೊರಹೋಗಲು ಅವಕಾಶ ನೀಡಲಾಗುವುದು. ಕಟ್ಟುನಿಟ್ಟಿನ ತಪಾಸಣೆ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ ಮೊದಲೇ ಬರಬೇಕು ಎಂದು ಅವರು ಸೂಚಿಸಿದ್ದಾರೆ.
4
+ ರೊಚ್ಚಿಗೆದ್ದ ಅಮೆರಿಕ-ಬ್ರಿಟನ್, ಹೌತಿ ಬಂಡುಕೋರರ ಮೇಲೆ ಏರ್ ಸ್ಟ್ರೈಕ್
5
+ ಪರೀಕ್ಷೆ ನಡೆಯುವ 41 ವಿಷಯಗಳಲ್ಲಿ ವಾಣಿಜ್ಯ ಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ವು ಅಂದರೆ 16,000 ಮಂದಿ ತೆಗೆದುಕೊಂಡಿದ್ದಾರೆ. ಕನ್ನಡ ವಿಷಯವನ್ನು 11 ಸಾವಿರ ಮಂದಿ ತೆಗೆದುಕೊಂಡಿದ್ದಾರೆ. ಅತಿ ಕಡಿಮೆ ಅಂದರೆ 25 ಮಂದಿ ಅಭ್ಯರ್ಥಿಗಳು ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
6
+ ಪರೀಕ್ಷೆ ಬರೆಯುವ ಒಟ್ಟು ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕ ಪಡೆದ ಶೇ. 6ರಷ್ಟು ಮಂದಿ ಅಂತಿಮವಾಗಿ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲಿದ್ದಾರೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಅವರು ಹೇಳಿದ್ಧಾರೆ.
7
+ 800 ಇ- ಮೇಲ್:ನೋಂದಣಿ ಸಂಖ್ಯೆ ಕಳೆದುಕೊಂಡ 800ಕ್ಕೂ ಹೆಚ್ಚು ಮಂದಿ ಕೆ-ಸೆಟ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳದ ಕಾರಣ ಅವರ ಇ-ಮೇಲ್‍ಗಳಿಗೆ ನೋಂದಣಿ ಸಂಖ್ಯೆ ರವಾನಿಸುವ ಕೆಲಸವನ್ನು ಕೆಇಎ ಮಾಡಿದ್ದು ಎಲ್ಲರೂ ಪರೀಕ್ಷೆ ತೆಗೆದುಕೊಳ್ಳಲು ಇದು ನೆರವಾಗಿದೆ ಎಂದು ತಿಳಿಸಿದ್ದಾರೆ.
eesanje/url_46_264_10.txt ADDED
@@ -0,0 +1,6 @@
 
 
 
 
 
 
 
1
+ ನೂತನ ಸಂಸತ್ ಭವನದಲ್ಲಿ ಬಜೆಟ್ ಮಂಡನೆಗೆ ಸಿದ್ಧತೆ
2
+ ನವದೆಹಲಿ, ಜ.11- ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ಬಹುನಿರೀಕ್ಷೀತ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಫೆ.1ರಂದು ಮಂಡನೆಯಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು, ಫೆ .1ರಂದು ಹೊಸ ಸಂಸತ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
3
+ ಇದು ಚುನಾವಣಾ ವರ್ಷವಾಗಿರುವ ಕಾರಣ, ಪೂರ್ಣಾವಧಿ ಅಯವ್ಯಯ ಮಂಡನೆ ಮಾಡದೆ, ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದಾರೆ. ಏಪ್ರಿಲ್ ಹಾಗೂ ಮೇ ತಿಂಗಳ ಮಧ್ಯ ಭಾಗದಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿಯ ಬಜಟ್ ನಲ್ಲಿ ಹೊಸ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆ ಇಲ್ಲ.
4
+ ಲೋಕಸಭೆ ಚುನಾವಣೆ ಕಸರತ್ತು, ದೆಹಲಿಗೆ ದೌಡಾಯಿಸಿದ ಸಚಿವರು
5
+ ಮಧ್ಯಂತರ ಬಜೆಟ್‍ನಲ್ಲಿ ಮಹಿಳಾ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಯನ್ನು ದ್ವಿಗುಣಗೊಳಿಸುವ ಪ್ರಸ್ತಾಪವಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಸಂಸತ್ತಿನ ಬಜೆಟ್ ಅಧಿವೇಶನವು ಜ.31 ರಿಂದ ಫೆ.9ರ ವರೆಗೆ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜ.31ರಂದು ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
6
+ ಈ ಬಾರಿಯ ಅಧಿವೇಶನದಲ್ಲಿ ಕೇಂದ್ರದ ಎನ್‍ಡಿಎ ಸರ್ಕಾರ ಯಾವುದೇ ಪ್ರಮುಖ ಬದಲಾವಣೆಗಳನ್ನು ಮಾಡುವ ಕಾರ್ಯಸೂಚಿಯನ್ನು ಹೊಂದಿಲ್ಲ ಎಂದು ತಿಳಿದು ಬಂದಿದೆ.
eesanje/url_46_264_11.txt ADDED
@@ -0,0 +1,7 @@
 
 
 
 
 
 
 
 
1
+ ಜ.17ರಿಂದ ಅರ್ನಿಷ್ಟಾವಧಿ ಲಾರಿ ಮುಷ್ಕರ
2
+ ಬೆಂಗಳೂರು,ಜ.11- ರಾಜ್ಯದ ಎಲ್ಲಾ ಲಾರಿ ಮಾಲೀಕರ ಸಂಘದವರು ಸಭೆ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಿ ಜ.17 ರಿಂದ ನಮ್ಮ ಬೇಡಿಕೆ ಈಡೇರುವ ವರೆಗೂ ವಾಹನಗಳನ್ನು ಓಡಿಸದಿರಲು ನಿರ್ಧರಿಸಿದ್ದೇವೆ ಎಂದು ದಕ್ಷಿಣ ಭಾರತ ಲಾರಿ ಮಾಲೀಕರ ಸಂಘಟನೆ ಹೇಳಿದೆ. ನಗರದಲ್ಲಿಂದು ಕರ್ನಾಟಕ , ಕೇರಳ, ಆಂಧ್ರ, ತಮಿಳುನಾಡು, ಪಾಂಡಿಚೇರಿ ರಾಜ್ಯಗಳ ಲಾರಿ ಮಾಲೀಕರ ಸಂಘಟ ನೆಗಳ ಮುಖಂಡರು ಸಭೆ ನಡೆಸಿ ಜ.17ರಿಂದ ಅರ್ನಿಷ್ಟಾವಧಿ ಲಾರಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
3
+ ಈಗಾಗಲೆ ದೇಶದ ಉತ್ತರ ಭಾಗದಲ್ಲಿ ಯಶಸ್ವಿಯಾಗಿ ಮುಷ್ಕರ ನಡೆದಿದೆ. ಆದರೆ ನಮ್ಮ ರಾಜ್ಯದಲ್ಲಿನ ಸರ್ಕಾರದ ಕಣ್ಣು ತೆರೆಸಲು ಈ ಮುಷ್ಕರ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರವು ತಂದಿದ್ದ ಭಾರತೀಯ ನ್ಯಾಯ ಸಂಹಿತೆಯ ಕಲಂ 106ರ ಉಪವಿ 1 ಮತ್ತು 2ಅನ್ನು ಸದ್ಯ ನಿಲ್ಲಿಸಿದೆ. ಆದರೆ ಇದನ್ನು ತಟಸ್ಥಗೊಳಿಸಬೇಕು. ಇನ್ನು ರಾಜ್ಯಸರ್ಕಾರದ ಬೇಡಿಕೆಯಲ್ಲಿ ಸಾರಿಗೆ ಇಲಾಖೆಯು ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲಾ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದುಹಾಕಬೇಕು.
4
+ ನೈತಿಕ ಪೊಲೀಸ್‍ಗಿರಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ್ ಸೂಚನೆ
5
+ ಓವರ್ ಪ್ರೊಜೆಕ್ಷನ್‍ಗೆ ವಿಧಿಸುತ್ತಿರುವ 20,000ರೂ. ದಂಡವನ್ನು ಕಡಿಮೆ ಮಾಡಬೇಕು. ಡಿಎಸ್‍ಎ ಕೇಸುಗಳು ಎಲ್ಲೇ ಇದ್ದರೂ ಸಹ ಅದನ್ನು ವಾಹನ ಮಾಲೀಕರು ತಮ್ಮ ಮೂಲ ಕಚೇರಿಯಲ್ಲಿ ಮುಗಿಸಿಕೊಳ್ಳಲು ಅವಕಾಶ ನೀಡಬೇಕು. ಬೆಂಗಳೂರು ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳ ನಗರ ಪ್ರವೇಶಕ್ಕೆ ದಿನದ ಕೆಲವು ಸಮಯದಲ್ಲಿ ಮಾಡಿರುವ ನಿಬರ್ಂಧವನ್ನು ಸಂಪೂರ್ಣವಾಗಿ ಕೈಬಿಡಬೇಕು. ಅಪಘಾತ ನಡೆದಾಗ ವಾಹನದ ಚಾಲಕನ ಚಾಲನಾ ಪತ್ರವನ್ನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು ಹಾಗೂ ಅಪಘಾತ ನಡೆದ ನಂತರ ವಶಪಡಿಸಿಕೊಂಡ ವಾಹನ ಮತ್ತು ಚಾಲಕನನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಮತ್ತು ಚಾಲಕನ ಚಾಲನಾ ಪರವಾನಗಿಯನ್ನು ಅಮಾನತಿನಲ್ಲಿಡುವಂತೆ ಪ್ರಾದೇಶಿಕ ಸಾರಿಗೆ ಅಕಾರಿಗಳಿಗೆ ಪತ್ರ ಬರೆಯುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
6
+ ಹೊರ ರಾಜ್ಯಗಳ ವಾಹನಗಳು ನಮ್ಮ ರಾಜ್ಯದಲ್ಲಿ ಅಪಘಾತಕ್ಕೆ ಈಡಾದಾಗ, ವಾಹನ ಮತ್ತು ಚಾಲಕನ ಬಿಡುಗಡೆಗೆ ಸ್ಥಳೀಯ ಭದ್ರತೆ ಮತ್ತು ಜಾಮೀನು ಕೇಳುವುದನ್ನು ನಿಲ್ಲಿಸಬೇಕು. ವಾಹನಗಳು ಬ್ರೇಕ್‍ಡೌನ್ ಆಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಬದಿಯಲ್ಲಿ ನಿಂತಿದ್ದರೂ ವಾಹನಗಳನ್ನು ವಶಪಡಿಸಿಕೊಂಡು ಕಲಂ 283ರಡಿಯಲ್ಲಿ ಕೇಸು ದಾಖಲಿಸುವುದನ್ನು ನಿಲ್ಲಿಸಬೇಕು.
7
+ ಹೆದ್ದಾರಿಯಲ್ಲಿ ವಾಹನಗಳ ನಿಲುಗಡೆ ಮಾಡಿದಾಗ ಸರಕುಗಳ ಕಳ್ಳತನ ಮತ್ತು ವಾಹನದ ಡೀಸೆಲ್ ಮತ್ತು ಬಿಡಿ ಭಾಗಗಳು ಕಳ್ಳತನವಾದಾಗ ಮಾಲೀಕರು ಠಾಣೆಗೆ ತೆರಳಿ ದೂರು ನೀಡಿದಾಗ ಅದಕ್ಕೆ ಎಫ್‍ಐಆರ್ ದಾಖಲಿಸಬೇಕು ಎಂಬ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.
eesanje/url_46_264_12.txt ADDED
@@ -0,0 +1,7 @@
 
 
 
 
 
 
 
 
1
+ ರಾಜಕಾರಣದಲ್ಲಿ ಧರ್ಮವನ್ನು ಬೆರೆಸುವುದು ಸಂವಿಧಾನಕ್ಕೆ ವಿರುದ್ಧ : ಬಿ.ಕೆ.ಹರಿಪ್ರಸಾದ್
2
+ ಬೆಂಗಳೂರು,ಜ.11-ಧರ್ಮದಲ್ಲಿ ರಾಜಕಾರಣ ಮಾಡುವುದು, ರಾಜಕಾರಣದಲ್ಲಿ ಧರ್ಮವನ್ನು ಬೆರೆಸುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ಸಂವಿಧಾನವನ್ನು ಉಲ್ಲಂಘಿಸುವ ಬಿಜೆಪಿಯವರು ದೇಶದ್ರೋಹಿಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ದೂರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ಇದಕ್ಕೆ ನನ್ನ ಸಹಮತ ಇದೆ ಎಂದರು.
3
+ ಈ ಹಿಂದೆ ತಾವು ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ಜ.22 ರಂದು ನಡೆಯಲಿರುವ ಕಾರ್ಯಕ್ರಮ ರಾಜಕೀಯ ಪ್ರಮುಕ್ತವಾಗಿದೆ. ಅದು ಧಾರ್ಮಿಕ ಕಾರ್ಯಕ್ರಮ ಅಲ್ಲ. ಹಾಗಾಗಿ ಅದರಿಂದ ದೂರ ಉಳಿಯುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾಗಿ ತಿಳಿಸಿದರು. ತಮಗೆ ತಿಳಿದಿರುವ ಅಲ್ಪಸ್ವಲ್ಪ ಧಾರ್ಮಿಕ ವಿಚಾರಗಳ ಪ್ರಕಾರ, ಹಿಂದೂ ಧರ್ಮದ ಮೂಲಗುರು ಎಂದರೆ ಆದಿ ಶಂಕರಾಚಾರ್ಯರು. ಅವರು ಸ್ಥಾಪಿಸಿದ ಮಠದ ಜಗದ್ಗುರುಗಳು ಅಯೋಧ್ಯೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ.
4
+ ರಾಮ, ಶಿವ ಎಲ್ಲರ ದೇವರು, ಇದರಲ್ಲಿ ಅನಗತ್ಯ ರಾಜಕೀಯ ಬೇಡ : ಸಚಿವ ಎಂ.ಬಿ.ಪಾಟೀಲ್
5
+ ಒಂದು ವೇಳೆ ಆದಿ ಶಂಕರಾಚಾರ್ಯ ಮಠದ ಜಗದ್ಗುರುಗಳು ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದರೆ ಅದರಲ್ಲಿ ನಾವು ಭಾಗವಹಿಸುತ್ತಿದ್ದೆವು. ಯಾರ ಆಹ್ವಾನವೂ ಬೇಕಿರಲಿಲ್ಲ. ಮಂತ್ರಾಕ್ಷತೆ ನೀಡುವಂತಹ ನಾಟಕವೂ ಬೇಕಾಗುತ್ತಿರಲಿಲ್ಲ ಎಂದು ತಿಳಿಸಿದರು.
6
+ ದೇವರು ಎಂದರೆ ನಂಬಿಕೆ. ಬಿಜೆಪಿಯವರು ಧರ್ಮದಲ್ಲಿ ರಾಜಕೀಯ ಬೆರೆಸಿ ಧರ್ಮ ವಿರೋಧಿಗಳಾಗಿದ್ದಾರೆ. ರಾಜಕೀಯದಲ್ಲಿ ಧರ್ಮ ತಂದು ಸಂವಿಧಾನ ವಿರೋಗಳೂ ಆಗಿ ದೇಶದ್ರೋಹಿಗಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹಿಂದೂ ಉದಯ ಸಾಮ್ರಾಟ ಎಂದು ಬಿಂಬಿಸಿಕೊಳ್ಳುತ್ತಿರುವವರು 2014 ಮತ್ತು 2019 ರ ಚುನಾವಣೆಯಲ್ಲಿ ಹಿಂದೂಗಳ ಎಷ್ಟು ಮತ ಪಡೆದಿದ್ದಾರೆ ಎಂಬ ಅಂಕಿ ಅಂಶಗಳನ್ನು ನೋಡಿದರೆ ವಾಸ್ತವಾಂಶ ದೊರೆಯುತ್ತದೆ. ಒಟ್ಟು ಮತದಾರರ ಪೈಕಿ ಬಿಜೆಪಿಯವರಿಗೆ ಕಾಲು ಭಾಗವೂ ಮತ ಬಂದಿಲ್ಲ. ಹೀಗಿರುವಾಗ ಬಿಜೆಪಿಗೆ ಹಿಂದೂ ಧರ್ಮದ ಬೆಂಬಲ ಇದೆ ಎಂದು ಹೇಗೆ ಹೇಳಿಕೊಳ್ಳುತ್ತಾರೆ ಎಂದು ತಿಳಿಸಿದರು.
7
+ ಬಿಜೆಪಿಯವರು ಎಂದಿಗೂ ಜನರ ಪರವಾದ ವಿಚಾರಗಳ ಕುರಿತು ಚರ್ಚೆ ಮಾಡುವುದಿಲ್ಲ. ಪಕ್ಷ ಉದಯವಾದಾಗಲೇ 370 ರದ್ದುಪಡಿಸುವುದು, ಏಕರೂಪ ನಾಗರಿಕ ಸಂಹಿತೆ ಜಾರಿ ಮತ್ತು ಅಯೋಧ್ಯೆ ಅವರ ಅಜೆಂಡಾವಾಗಿತ್ತು. ಅದರ ಹೊರತಾಗಿ ಜನರ ಬದುಕಿನ ಸುಧಾರಣೆಗಳ ಬಗ್ಗೆ ಅವರು ಚಿಂತಿಸುವುದಿಲ್ಲ. ಯುವಕರು, ವಿದ್ಯಾರ್ಥಿಗಳು, ಕಾರ್ಮಿಕರು, ಮಹಿಳೆಯರು, ರೈತರು, ಕೈಗಾರಿಕೆಗಳ ಬಗ್ಗೆ ಬಿಜೆಪಿಯವರು ಯಾವತ್ತೂ ಪ್ರಸ್ತಾಪಿಸುವುದಿಲ್ಲ ಎಂದು ಹೇಳಿದರು.
eesanje/url_46_264_2.txt ADDED
@@ -0,0 +1,6 @@
 
 
 
 
 
 
 
1
+ ಕಾಂಗ್ರೆಸ್‍ನ ಕಣಕಣದಲ್ಲೂ ಹಿಂದೂ ದ್ವೇಷ ಇದೆ : ಆರ್.ಅಶೋಕ್
2
+ ಬೆಂಗಳೂರು,ಜ.12- ಆಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವ ಬಿಜೆಪಿ, ಆರ್‍ಎಸ್‍ಎಸ್ ಕಾರ್ಯಕ್ರಮವಾಗಿದೆ, ಆದ್ದರಿಂದ ನಾವು ಹೋಗುವುದಿಲ್ಲ ಎಂದು ಹೇಳುತ್ತಿರುವ ಕಾಂಗ್ರೆಸ್ ಪಕ್ಷ 1951ರಲ್ಲಿ ಸೋಮನಾಥ ದೇವಾಲಯಕ್ಕೆ ಏಕೆ ಹೋಗಲಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.
3
+ ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಹಿಂದೂ ದ್ವೇಷ ಕಾಂಗ್ರೆಸ್‍ನ ಕಣಕಣದಲ್ಲೂ ಇದೆ. 1951ರಲ್ಲಿ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಸೋಮನಾಥ ದೇವಾಲಯದ ಉದ್ಘಾಟನೆ ಆದಾಗ ಅಂದಿನ ಪ್ರಧಾನಿ ನೆಹರೂ ಅವರು ಅದರಲ್ಲಿ ಭಾಗವಹಿಸಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
4
+ ಕ್ರೀಡೆಗಳು ಜೀವನ ಪಾಠ ಕಲಿಸುತ್ತದೆ : ಎಸ್.ಮರಿಸ್ವಾಮಿ
5
+ ಅಷ್ಟೇ ಅಲ್ಲದೆ, ಸೋಮನಾಥ ದೇವಾಲಯದ ಜೀರ್ಣೋದ್ಧಾರವನ್ನೇ ವಿರೋಧಿಸಿದ್ದ ನೆಹರೂ ಅವರು ಅಂದಿನ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರನ್ನು ಸಹ ಹೋಗದಂತೆ ತಡೆಯಲು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ.
6
+ 1951ರಲ್ಲಿ ಬಿಜೆಪಿ ಇನ್ನೂ ಸ್ಥಾಪನೆಯೇ ಆಗಿರಲಿಲ್ಲ. ಮೇಲಾಗಿ ಅಂದು ಕಾಂಗ್ರೆಸ್ ಸರ್ಕಾರವೇ ಇತ್ತು, ಸ್ವತಃ ನೆಹರೂ ಅವರೇ ಪ್ರಧಾನಿ ಆಗಿದ್ದರು. ಕಾಂಗ್ರೆಸ್ ಪಕ್ಷದ ಹಿಂದೂ ದ್ವೇಷ ಅದರ ಕಣ ಕಣದಲ್ಲೂ ಇದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ.
eesanje/url_46_264_3.txt ADDED
@@ -0,0 +1,6 @@
 
 
 
 
 
 
 
1
+ ಕ್ರೀಡೆಗಳು ಜೀವನ ಪಾಠ ಕಲಿಸುತ್ತದೆ : ಎಸ್.ಮರಿಸ್ವಾಮಿ
2
+ ಬೆಂಗಳೂರು,ಜ.11- ಕ್ರೀಡೆಗಳು ನಮ್ಮ ಜೀವನವನ್ನು ಹೇಗೆ ನಡೆಸಬೇಕೆಂಬುದನ್ನು ಕಲಿಸುತ್ತವೆ. ಏಕೆಂದರೆ ಅಲ್ಲಿ ಸ್ಪರ್ಧೆಯಿದೆ. ಸೋಲು-ಗೆಲುವು, ಮತ್ತು ಅವುಗಳನ್ನು ಸ್ವೀಕರಿಸುವ ವಿಧಾನವನ್ನು ಹೇಳಿಕೊಡುತ್ತದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಸ್.ಮರಿಸ್ವಾಮಿ ತಿಳಿಸಿದ್ದಾರೆ.
3
+ ಕೋರಮಂಗಲದ ಕೆಎಸ್‍ಆರ್‍ಪಿ ಕ್ರೀಡಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ಪೊಲೀಸ್ ಕ್ರೀಡಾ ವಾರ್ಷಿಕೋತ್ಸವ-2023 ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನವನ್ನು ಹೇಗೆ ನಡೆಸಬೇಕು ಎಂಬುದನ್ನು ಕ್ರೀಡೆಯಲ್ಲಿನ ಸೋಲು-ಗೆಲುವುಗಳು ನಮಗೆ ತಿಳಿಸುತ್ತವೆ. ಯಾವ ಹಂತದಲ್ಲಿ ಹಿಂದೆ ಬಿದ್ದಿದ್ದೇವೆ ಎಂದು ತಿಳಿದು ಸಾಧನೆ, ಪ್ರತಿಭೆ, ಉತ್ಸಾಹದ ಮೂಲಕ ಆ ಸ್ಥಾನ ಮತ್ತೆ ಪಡೆದುಕೊಳ್ಳಬಹುದು ಎಂಬುದನ್ನು ಕ್ರೀಡೆ ಕಲಿಸುತ್ತದೆ ಎಂದರು.
4
+ ಕರ್ನಾಟಕ ಪೊಲೀಸ್ ಅನೇಕ ಕ್ರೀಡಾ ಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆಯನ್ನು ತೋರಿಸಿದ್ದಾರೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹ ಸಿಗುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕ್ರೀಡಾಪಟುಗಳು ಪದಕಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವುಗಳಲ್ಲಿ ರಾಜ್ಯಗಳು ಮತ್ತು ರಾಜ್ಯ ಪೊಲೀಸ್ ಇಲಾಖೆಗಳು ನೀಡಿರುವ ಕೊಡುಗೆ ಕಡಿಮೆಯೇನೂ ಇಲ್ಲ ಎಂದು ಹೇಳಿದರು.
5
+ ಮಗುವನ್ನು ಕೊಲ್ಲುವ ಮುನ್ನ ಪತಿಯೊಂದಿಗೆ ಮೊಬೈಲ್‍ನಲ್ಲಿ ಜಗಳವಾಡಿದ್ಧ ಸುಚನಾ ಸೇಠ್
6
+ ನಮ್ಮಲ್ಲಿ ಪ್ರತಿಭೆಗಳಿವೆ. ಸಾಧನೆ ಮಾಡುವ ಶಕ್ತಿಯಿದೆ. ಅವರಿಗೆ ಉತ್ತೇಜನ ಕೊಡುವ ಕೆಲಸ ನಾವು ಮಾಡಬೇಕು. ಕರ್ನಾಟಕ ಪೊಲೀಸ್ ಕ್ರೀಡಾ ಮಂಡಳಿಯು 15 ತಂಡಗಳನ್ನು ಬೇರೆಬೇರೆ ಕಡೆಗಳಲ್ಲಿ ತರಬೇತಿ ನೀಡುತ್ತಿದೆ. ಅವರು ಮುಂದಿನ ದಿನಗಳಲ್ಲಿ ಬಹಳಷ್ಟು ಸಾಧನೆ ಮಾಡುವ ಸಾಧ್ಯತೆಯಿದೆ ಎಂದರು. ಇಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಯಶಸ್ವಿಯಾಗುವಂತೆ ಹಾರೈಸುತ್ತೇನೆ ಎಂದು ಎಸ್.ಮರಿಸ್ವಾಮಿ ಯವರು ಹೇಳಿದರು.
eesanje/url_46_264_4.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವರ್ಷದ ಮೊದಲ ಸುಗ್ಗಿ ಹಬ್ಬ ಸಂಕ್ರಾಂತಿ ಸಂಭ್ರಮ
2
+ ಬೆಂಗಳೂರು, ಜ.11- ವರ್ಷದ ಮೊದಲ ಹಬ್ಬ ಸುಗ್ಗಿ ಹಬ್ಬ ಸಂಕ್ರಾಂತಿ ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದ್ದು, ಹಬ್ಬಕ್ಕೆ ಬೇಕಾದ ಅಗತ್ಯವಸ್ತುಗಳ ಖರೀದಿಗೆ ಜನರು ಇಂದಿನಿಂದಲೇ ಮಾರುಕಟ್ಟೆಗಳತ್ತ ಮುಖ ಮಾಡಿದ್ದು, ಬೆಲೆ ಏರಿಕೆ ಬಿಸಿ ತಟ್ಟಿದೆ. ಹಬ್ಬಕ್ಕೆ ಬೇಕಾದ ಕಬ್ಬು, ಕಡಲೆಕಾಯಿ, ಅವರೆಕಾಯಿ, ಗೆಣಸುಗಳ ರಾಶಿ ಬಂದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿವೆ. ಮತ್ತೊಂದೆಡೆ ಸಿದ್ಧ ಎಳ್ಳು- ಬೆಲ್ಲ, ಸಕ್ಕರೆ ಅಚ್ಚು ಆಕರ್ಷಿಸುತ್ತಿವೆ. ಆದರೆ, ಬೆಲೆ ಏರಿಕೆ ಗ್ರಾಹಕರ ಜೇಬು ಸುಡುತ್ತಿದೆ.
3
+ ಸಾಮಾನ್ಯವಾಗಿ ಹಬ್ಬಗಳ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸರ್ವೆಸಾಮಾನ್ಯ. ಆದರೆ, ಈ ಬಾರಿ ರಾಜ್ಯದಲ್ಲಿ ಬರ ಆವರಿಸಿದ್ದು, ಬೆಳೆ ಬಾರದೆ ಮತ್ತಷ್ಟು ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಮುಖ್ಯವಾಗಿ ಕಡಲೆಕಾಯಿ, ಆವರೆಕಾಯಿ ಪ್ರಮುಖವಾಗಿದ್ದು ಇವನ್ನು ಮಳೆ ಆಶ್ರಿತ ಪ್ರದೆಶಗಳಲ್ಲಿ ಬೆಳೆಯಲಾಗುತ್ತದೆ. ಈ ಬಾರಿ ಮಳೆ ಬಾರದೆ, ಬೆಳೆ ಬಾರದೆ ಇರುವುದರಿಂದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.
4
+ ಮಗುವನ್ನು ಕೊಲ್ಲುವ ಮುನ್ನ ಪತಿಯೊಂದಿಗೆ ಮೊಬೈಲ್‍ನಲ್ಲಿ ಜಗಳವಾಡಿದ್ಧ ಸುಚನಾ ಸೇಠ್
5
+ ತುಮಕೂರು ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ರಾಮನಗರ ತಾಲೂಕಿನ ಮಾಗಡಿ, ತಾಲೂಕುಗಳಲ್ಲಿ ಹೆಚ್ಚು ಕಡಲೆಕಾಯಿ ಬೆಳೆಯುವ ಕಾಲವೊಂದಿತ್ತು. ಆದರೆ ದಿನ ಕಳೆದಂತೆ ಕಡಲೆ ಬೆಳೆಯುವವರೇ ಇಲ್ಲದಂತಾಗಿದೆ. ನೀರಿನ ಅಭಾವ, ಕಾಡುಪ್ರಾಣಿಗಳ ಹಾವಳಿ, ಕೂಲಿಕಾರ್ಮಿಕರ ಕೊರತೆ, ರಸಗೊಬ್ಬರಗಳ ಬೆಲೆ ಏರಿಕೆಯಿಂದ ರೈತರು ಕಡಲೆಕಾಯಿ ಬೆಳೆಯಲು ಒಲವು ತೊರದೆ ಜಮೀನುಗಳೆಲ್ಲ ಪಾಳು ಬಿದ್ದಿವೆ. ಇದರಿಂದ ಉತ್ಪಾದನೆ ಕುಂಠಿತವಾಗಿ ಬೆಲೆ ಹೆಚ್ಚಳವಾಗಿದೆ . ಆಂಧ್ರ ತಮಿಳುನಾಡಿನಿಂದ ಅಪಾರ ಪ್ರಮಾಣದಲ್ಲಿ ಕಡಲೆಕಾಯಿ ಬಂದಿದ್ದು, ಕೆಜಿಗೆ 100 ರಿಂದ 150 ರೂ. ವರೆಗೂ ಮರಾಟವಾಗುತ್ತಿದೆ.
6
+ ಇನ್ನು ದಿನ್ನೆ ಜಮೀನುಗಳಲ್ಲಿ ಬೆಳೆದ ಆವರೆ ಕಾಯಿಯ ಸೊಗಡೇ ಬೇರೆ. ಅದರಲ್ಲೂ ಮಾಗಡಿ ಅವರೆ ಎಂದರೆ ಹೆಸರುವಾಸಿ. ಆದರೆ ಈ ಬಾರಿ ಮಳೆ ಕೈ ಕೊಟ್ಟಿದ್ದು, ಮಳೆಯಾಶ್ರಿತ ಪ್ರದೇಶಗಳಲ್ಲಿ ಅವರೆ ಬೆಳೆ ಬಂದಿಲ್ಲ. ನೀರಾವರಿ ಪ್ರದೇಶದಲ್ಲಿ ಬೆಳೆದ ಬೆಳೆ ಬಂದಿದ್ದು, ಇದರಲ್ಲಿ ಸೊಗಡೆ ಇಲ್ಲದಂತಾಗಿದ್ದು, ಕೆಜಿಗೆ 60 ರಿಂದ 70 ರೂ.ಗೆ ಮಾರಾಟ ಮಾಡಲಾಗುತ್ತಿದೆ.
7
+ ಮೊದಲೆಲ್ಲಾ ಹಬ್ಬಕ್ಕೆ ಇನ್ನೂ ಕೆಲ ದಿನ ಬಾಕಿ ಇರುವಾಗಲೆ ಹಿರಿಯರು ಮನೆಯಲ್ಲೆ ಕಡಲೆಬೀಜ, ಎಳ್ಳು, ಹುರಿದು, ಕೊಬ್ಬರಿ ಹಾಗೂ ಬೆಲ್ಲ ಹೆಚ್ಚಿಟ್ಟುಕೊಂಡು ಸಾಂಪ್ರದಾಯಿಕವಾಗಿ ಮಿಶ್ರಣ ಮಾಡಿ ಹಬ್ಬದ ದಿನ ಎಳ್ಳು-ಬೆಲ್ಲ ಬೀರುತ್ತಿದ್ದರು. ಆದರೆ ಇತ್ತಿಚೀನ ದಿನಗಳಲ್ಲಿ ಎಲ್ಲವೂ ರೆಡಿಮೆಡ್ ಆಗಿದೆ. ಯಾರೂ ಕೂಡ ಮನೆಯಲ್ಲಿ ಎಳ್ಳು-ಬೆಲ್ಲ ಮಾಡುವ ಗೋಜಿಗೆ ಹೊಗ��ವುದಿಲ್ಲ. ಅಂಗಡಿಯಲ್ಲಿ ಬಗೆಬಗೆಯ ಮಿಶ್ರಣ ದೊರೆಯುತ್ತಿದ್ದು, ಅದನ್ನು ತಂದು ಹಬ್ಬ ಮಾಡುತ್ತಾರೆ.
8
+ ಟೆಕ್ಕಿಗಳಿಂದ ಹಣದಾಸೆಗಾಗಿ ಮ್ಯಾಟ್ರೋಮೋನಿ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ
9
+ ಇದು ನಗರ ಪ್ರದೇಶದ ಕಥೆಯಲ್ಲ ಗ್ರಾಮೀಣ ಭಾಗದ ಕೆಲವರು ರೆಡಿಮೆಡ್‍ಗೆ ಆಕರ್ಷಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಸಿದ್ಧ ಪಡಿಸಿದ ಎಳ್ಳು-ಬೆಲ್ಲ ಕೆಜಿಗೆ 250 ರಿಂದ 300 ರೂ.ಗೆ ಮರಾಟ ಮಾಡಲಾಗುತ್ತಿದೆ. ಚಳಿಗಾಲದಲ್ಲಿ ಎಳ್ಳು-ಬೆಲ್ಲ, ಕೊಬ್ಬರಿ ಸೇವಿಸಿದರೆ ಚರ್ಮ ಒಡೆಯುವುದಿಲ್ಲ ಎಂಬ ವೈಜ್ಞಾನಿಕ ಕಾರಣದಿಂದ ಹಬ್ಬದ ಹೆಸರಿನಲ್ಲಾದರೂ ಜನರು ಎಳ್ಳು-ಬೆಲ್ಲ ಸವಿಯಲಿ ಎಂದು ಹಿರಿಯರು ಸಂಪ್ರದಾಯ ಮಾಡಿದ್ದರು. ಆದರೆ ನಮ್ಮ ಜನ ಆಧುನೀಕರಣಕ್ಕೆ ಜೋತು ಬಿದ್ದು ನೆಪಮಾತ್ರಕ್ಕೆ ಹಬ್ಬ ಮಾಡಿ ರೆಡಿಮೇಡ್ ತಿನ್ನುತ್ತಾರೆ. ಇದರಲ್ಲಿ ಯಾವ ಪದಾರ್ಥವೂ ಸಮ ಪ್ರಮಾಣದಲ್ಲಿ ಇರುವುದಿಲ್ಲ.
10
+ ಬೆಂಗಳೂರಿನ ಕೆಆರ್ ಮಾರುಕಟ್ಟೆ, ಯಶವಂತಪುರ, ಬಸವನಗುಡಿ, ವಿಜಯನಗರ, ಜಯನಗರ, ದಾಸರಹಳ್ಳಿ, ಕೆಆರ್‍ಪುರ, ಮಲ್ಲೇಶ್ವರಂ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಗೆಣಸು, ಕಬ್ಬು, ಅವರೆಕಾಯಿ, ಕಡಲೆಕಾಯಿ ರಾಶಿ ರಾಶಿ ಬಂದಿದ್ದು, ಖರೀದಿ ಭರಾಟೆ ಜೋರಾಗಿದೆ. ಇನ್ನು ಹೂ-ಹಣ್ಣುಗಳ ಬೆಲೆಯೂ ಸಹ ತುಸು ಹೆಚ್ಚಾಗಿದೆ. ಏಲಕ್ಕಿ ಬಾಳೆ ಕೆಜಿ 100ರೂ.ಗೆ ಮರಾಟವಾಗುತ್ತಿದೆ.
11
+ ಯಾವ ಯಾವ ಬೆಲೆ ಎಷ್ಟಿದೆ ಅನ್ನೋದು ನೊಡುವುದಾದರೆ ಸಿದ್ಧ ಎಳ್ಳು-ಬೆಲ್ಲ ಮಿಶ್ರಣ ಕೆಜಿಗೆ 250- 300 ರೂ., ಕಬ್ಬು ಜೋಡಿ 80-100ರೂ., ಹಸಿಕಡಲೆಕಾಯಿ ಕೆಜಿ 100-150ರೂ., ಅವರೆಕಾಯಿ 60-80ರೂ., ಏಕಕ್ಕಿಬಾಳೆ 100-120ರೂ., ಸಕ್ಕರೆ ಅಚ್ಚು 200 ರೂ.ಗೆ ಮರಾಟವಾಗುತ್ತಿದೆ. ಇನ್ನೂ ಹಬ್ಬಕ್ಕೆ ಮೂರು ದಿನ ಬಾಕಿ ಉಳಿದಿದ್ದು ಇಂದಿನಿಂದಲೇ ಜನರು ಮಾರುಕಟ್ಟೆಗಳಿಗೆ ತೆರಳಿ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.
eesanje/url_46_264_5.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮಗುವನ್ನು ಕೊಲ್ಲುವ ಮುನ್ನ ಪತಿಯೊಂದಿಗೆ ಮೊಬೈಲ್‍ನಲ್ಲಿ ಜಗಳವಾಡಿದ್ಧ ಸುಚನಾ ಸೇಠ್
2
+ ಬೆಂಗಳೂರು,ಜ.11- ತನ್ನ ನಾಲ್ಕು ವರ್ಷದ ಮಗುವನ್ನು ತಾಯಿಯೇ ಹತ್ಯೆ ಮಾಡಿರುವ ಪ್ರಕರಣ ಇನ್ನಷ್ಟು ರೋಚಕ ತಿರುವುಗಳನ್ನು ಪಡೆದುಕೊಳ್ಳತೊಡಗಿದೆ. ಕೆಲವೇ ದಿನಗಳ ಮೊದಲು ಮಗನನ್ನು ಭೇಟಿಯಾಗುವಂತೆ ಪತಿಗೆ ಸುಚನಾ ಕೇಳಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
3
+ ಸುಚನಾ ಸೇಠ್ ಅವರು ಗೋವಾದ ಹೊಟೇಲ್ ಕೊಠಡಿಯೊಂದರಲ್ಲಿ ತನ್ನ ಪತಿಯೊಂದಿಗೆ ಮೊಬೈಲ್‍ನಲ್ಲಿ ನಡೆದ ಜಗಳದ ನಂತರ ತನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ತನ್ನ ಮಗುವಿನ ಸಾವಿನ ಬಗ್ಗೆಯಾಗಲಿ ಅಥವಾ ಅದರಲ್ಲಿ ತನ್ನ ಪಾತ್ರದ ಬಗ್ಗೆಯಾಗಲಿ ಮಹಿಳೆ ಇದುವರೆಗೆ ಯಾವುದೇ ಪಶ್ಚಾತ್ತಾಪವನ್ನೂ ವ್ಯಕ್ತಪಡಿಸಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
4
+ 39 ವರ್ಷ ವಯಸ್ಸಿನ ಸುಚನಾ ಜ. 8 ರಂದು ತನ್ನ ಮಗನನ್ನು ಕೊಂದು ಶವವನ್ನು ಸೂಟ್‍ಕೇಸ್‍ನಲ್ಲಿ ತುಂಬಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಮಗುವನ್ನು ಬಟ್ಟೆ ಅಥವಾ ದಿಂಬಿನಿಂದ ಉಸಿರುಗಟ್ಟಿಸಿ ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ. ಸೇಠ್ ಅವರನ್ನು ಪೊಲೀಸರು ಅದೇ ದಿನ ಕರ್ನಾಟಕದ ಚಿತ್ರದುರ್ಗದಿಂದ ಬಂಧಿಸಿ ಗೋವಾಕ್ಕೆ ಕರೆದೊಯ್ದಿದ್ದಾರೆ.
5
+ ತನಿಖೆ ವೇಳೆ, ಜ.6ರಂದು ತನ್ನ ಪತಿ ವೆಂಕಟ್ ರಾಮನ್‍ಗೆ ಸುಚನಾ, ಸಂದೇಶ ಕಳುಹಿಸಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಮರುದಿನ ಮಗುವನ್ನು ಭೇಟಿಯಾಗಬಹುದು ಎಂದು ಆಕೆ ತಿಳಿಸಿದ್ದಳು. ಹಾಗಾಗಿ ರಾಮನ್ ಅವರು ಬೆಂಗಳೂರಿಗೆ ಬಂದಿದ್ದರು. ಆದರೆ ಆ ದಿನ ಪತ್ನಿ ಮತ್ತು ಮಗು ಬೆಂಗಳೂರಿನಲ್ಲಿಲ್ಲದೆ ಗೋವಾಗೆ ಹೋಗಿರುವ ಕಾರಣ ಮಗನನ್ನು ಭೇಟಿಯಾಗಲು ತಂದೆಗೆ ಸಾಧ್ಯವಾಗದೆ ಅದೇ ದಿನ ಅವರು ಇಂಡೋನೇಷ್ಯಾಕ್ಕೆ ತೆರಳಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
6
+ ದಂಪತಿಯ ವಿಚ್ಛೇದನದ ದಾಖಲೆಗಳ ಪ್ರಕಾರ, ಸೇಠ್ ಅವರು ಆಗಸ್ಟ್ 2022 ರಲ್ಲಿ ತನ್ನ ಪತಿ ವೆಂಕಟ್ ರಾಮನ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದರು. ತನಗೆ ಮತ್ತು ತನ್ನ ಮಗನಿಗೆ ದೈಹಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಆಕೆ ಆರೋಪಿಸಿದ್ದರು. ಆದರೆ ವೆಂಕಟ್ ರಾಮನ್ ನ್ಯಾಯಾಲಯದಲ್ಲಿ ಆರೋಪವನ್ನು ನಿರಾಕರಿಸಿದ್ದರು. ಪತ್ನಿಯ ಮನೆಯಿಂದ ಅಥವಾ ಆಕೆ ಅಥವಾ ಮಗುವಿನೊಂದಿಗೆ ಸಂವಹನ ನಡೆಸುವುದನ್ನು ರಾಮನ್‍ಗೆ ನಿರ್ಬಂಧಿಸಿದ ವಿರುದ್ಧ ನ್ಯಾಯಾಲಯವು ತಡೆಯಾಜ್ಞೆ ನೀಡಿತ್ತು. ಇದು ಪತ್ನಿಯ ಅಸಮಾಧಾನಕ್ಕೆ ಕಾರಣ ಎನ್ನಲಾ ಗಿದ್ದು, ತನಿಖೆ ಮುಂದುವರೆದಿದೆ.
7
+ ಪ್ರಿಯಕರ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಂದ ಪಾಪಿ ಪತ್ನಿ
8
+ ಅಮ್ಮಾ ನನ್ನನ್ನು ಏಕೆ ಕೊಂದೆ..?ಬೆಂಗಳೂರು, ಜ.11- ಅಪ್ಪ-ಅಮ್ಮನ ನಡುವಿನ ಮನಸ್ತಾಪಕ್ಕೆ ಪ್ರಾಣತೆತ್ತ ಮಗು ಕೇಳುತ್ತಿದೆ ಅಮ್ಮಾ…. ನನ್ನನ್ನು ಯಾಕೆ ಕೊಂದೆ ಎಂದು…..!!!!! ಪ್ರೀತಿಯಿಂದ ಮಾತನಾಡಿಸುತ್ತಿದ್ದ ಅಪ್ಪನ ಕೈಯಲ್ಲಿದ್ದ ನಾಲ್ಕು ವರ್ಷದ ಮಗುವಿನ ಮೃತದೇಹವನ್ನು ನೋಡಿದಾಗ ಆ ಮಗು ಅಮ್ಮನನ್ನು ಹೀಗೆ ಪ್ರಶ್ನೆ ಮಾಡುತ್ತಿರುವಂತೆ ಭಾಸವಾಗುತ್ತಿತ್ತು.
9
+ ಅಪ್ಪ-ಅಮ್ಮನನ್ನೆ ನಂಬಿದ್ದ ಈ ಮುಗ್ದ ಮಗುವನ್ನು ಯಾರೆ ನೋಡಿದರೂ ಹೃದಯ ಕರಗುತ್ತದೆ. ಅಂತಹದ್ದರಲ್ಲಿ ತನ್ನ ಕರುಳ ಕುಡಿಯನ್ನೇ ಕೊಂದಿರುವ ನಿರ್ಧಯಿ ತಾಯಿಗೆ ತಪ್ಪಿನ ಅರಿವೇ ಆಗಲಿಲ್ಲವೆ…. ಹೆತ್ತ ತಾಯಿಯ ಇಂತಹ ಕ್ರೌರ್ಯ ನೋಡಿದರೆ ಮಾನವೀಯ ಮೌಲ್ಯಗಳು ಎತ್ತ ಸಾಗುತ್ತಿದೆ ಎಂಬ ಭಾಸವಾಗುತ್ತದೆ.
10
+ ಇದು ಪಾಶ್ಚಿಮಾತ್ಯ ಸಂಸ್ಕøತಿಯ ಪ್ರಭಾವವಿರಬಹುದೇ… ಈ ಪ್ರಕರಣದಲ್ಲಿ ಅತ್ಯಂತ ಪ್ರತಿಭಾನ್ವಿತೆಯಾಗಿರುವ ಸುಚನಾ ಸೇಠ್ ಅವರು ತಾನೂ ಒಬ್ಬ ತಾಯಿ ಎಂಬುದನ್ನು ಮರೆತಿದ್ದಾರೆ. ದಾಂಪತ್ಯದಲ್ಲಿ ಏನೇ ಮನಸ್ತಾಪವಿದ್ದರೂ, ಎಷ್ಟೇ ವೈಷಮ್ಯವಿದ್ದರೂ ಮಕ್ಕಳನ್ನು ಸಾಯಿಸುವ ಹಂತಕ್ಕೆ ಹೋಗುವುದು ಅಕ್ಷಮ್ಯ ಅಪರಾಧ.
11
+ ಒಂದು ವೇಳೆ ಮಕ್ಕಳು ಕೆಟ್ಟವರಾಗುತ್ತಾರೆ. ಆದರೆ ತಾಯಿ ಎಂದೂ ಕೆಟ್ಟವರಾಗಲ್ಲ ಎಂದು ಕೇಳಿದ್ದೇವೆ. ಆದರೆ ಈ ಪ್ರಕರಣದಲ್ಲಿ ಮಗು ಯಾವುದೇ ತಪ್ಪು ಮಾಡಿಲ್ಲ. ಅಪ್ಪನ ಜೊತೆ ಮಾತನಾಡಿದಕ್ಕೆ ಇಷ್ಟು ದೊಡ್ಡ ಶಿಕ್ಷೆಯೇ. ಇಂತಹ ಕ್ರೂರಿ ತಾಯಿಗೆ ಆ ದೇವರೇ ಶಿಕ್ಷೆ ಕೊಡಬೇಕು. ತಾಯಿ ಎಂಬ ಪದಕ್ಕೆ ಈ ಮಹಿಳೆ ಅವಮಾನ ಮಾಡಿದ್ದಾರೆ.
12
+ ತಂದೆ ರಾಮನ್ ಅವರು ಮಗುವಿನ ಮೃತದೇಹವನ್ನು ಕೈಯಲ್ಲಿ ಹಿಡಿದುಕೊಂಡು ಅಂತ್ಯಸಂಸ್ಕಾರಕ್ಕೆ ನಿಂತಿದ್ದನ್ನು ನೋಡಿದಾಗ ಕರುಳು ಚುರುಕ್ ಎನ್ನುತ್ತದೆ. ಆ ದೃಶ್ಯ ನೋಡಿದವರ ಕಣ್ಗಾಲೆಗಳು ಒದ್ದೆಯಾಗಿದೆ. ಎಷ್ಟೇ ಪ್ರತಿಭಾವಂತರಾದರೇನು, ಕೋಟ್ಯಾೀಶ್ವರರಾದರೇನು, ಮಾನವೀಯತೆ, ಮನುಷ್ಯತ್ವ ಎಂಬುದು ಬಹಳ ಮುಖ್ಯ ಹಾಗೂ ಮಹಿಳೆಯರು ಉದ್ಯೋಗ ಮಾಡಿ, ಸ್ವಂತ ದುಡಿಮೆಯಿಂದ ಹಣವನ್ನೆನೋ ಸಂಪಾದಿಸುತ್ತಿದ್ದಾರೆ, ಆದರೆ ಮಾನವೀಯತೆಯನ್ನು ಮರೆಯುತಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ.
13
+ ಮಾನವನಾಗುವೆಯಾ, ಇಲ್ಲ ದಾನವನಾಗುವೆಯಾ, ಮಾನವ ಕುಲಕೇ ಮಣ್ಣಾಗುವೆಯಾ….. ಎಂಬ ಹಾಡಿನ ಸಾಲು ನೆನಪಾಗುತ್ತಿದೆ. ದಾಪಂತ್ಯದಲ್ಲಿ ಏನೇ ವಿರಸವಿದ್ದರೂ ಮಕ್ಕಳನ್ನು ಬಲಿಕೊಡುವ ಹಂತಕ್ಕೆ ಹೋಗಬಾರದು.
eesanje/url_46_264_6.txt ADDED
@@ -0,0 +1,8 @@
 
 
 
 
 
 
 
 
 
1
+ ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ವೈಯಕ್ತಿಕ ಭೇಟಿ ನೀಡುತ್ತೇವೆ : ಸಚಿವ ರಾಜಣ್ಣ
2
+ ಬೆಂಗಳೂರು,ಜ.11- ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುತ್ತೇವೆ. ಆದರೆ ಸದ್ಯಕ್ಕೆ ರಾಜಕೀಯದ ವಿಚಾರವಾಗಿ ಜ.22 ರಂದು ಅಯೋಧ್ಯೆಗೆ ಭೇಟಿ ಹೋಗುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಅಯೋಧ್ಯೆ ರಾಮನ ಜನ್ಮಭೂಮಿ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಪಾವಿತ್ರ್ಯತೆ ಹೆಚ್ಚಿದೆ. ಈ ಮೊದಲು ತಾವು ಅಯೋಧ್ಯೆಗೆ ಭೇಟಿ ನೀಡಿ ಶೆಡ್‍ನಲ್ಲಿದ್ದ ರಾಮಲಲ್ಲಾನ ಮೂರ್ತಿಯ ದರ್ಶನ ಮಾಡಿ ಬಂದಿದ್ದೆ. ಮುಂದಿನ ದಿನಗಳಲ್ಲಿ ವೈಯಕ್ತಿಕವಾಗಿ ಅಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದರು.
3
+ ರಾಮ ಮಂದಿರದ ವಿಚಾರಕ್ಕೆ ಹೇಳುವುದಾದರೆ ಪ್ರತಿಯೊಂದೂ ಊರಿನಲ್ಲೂ ದೇವಸ್ಥಾನಗಳಿವೆ. ಅದರಲ್ಲೂ ನೂರಾರು ವರ್ಷಗಳ ಇತಿಹಾಸವಿರುವ ಮಂದಿರಗಳನ್ನೂ ನೋಡಿದ್ದೇವೆ. ಜ.22 ರಂದು ರಾಜಕೀಯಗೊಂಡಿರುವ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರಕ್ಕೆ ತಾವು ಬದ್ಧ ಎಂದರು.
4
+ ಲೋಕಸಭೆ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಹೈಕಮಾಂಡ್ ಕರೆದಿರುವ ಸಭೆಯಲ್ಲಿ ಭಾಗವಹಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಕುರಿತು ಚರ್ಚಿಸುವುದಿಲ್ಲ ಎಂದರು. ಈಗಾಗಲೇ ನಾವು ನಮ್ಮ ಅಭಿಪ್ರಾಯ ವನ್ನು ಹೇಳಿದ್ದೇವೆ. ಅದಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ಸೂಕ್ತ ನಿಲುವು ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.
5
+ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ, ನಿನ್ನೆ ತಾವು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ರಾಜಕೀಯವಾಗಿ ನಮ್ಮಿಬ್ಬರ ನಡುವೆ ವಿಚಾರಬೇಧಗಳಿರಬಹುದು. ಆದರೆ ಉಪಮುಖ್ಯಮಂತ್ರಿಯಾಗುವುದಕ್ಕಿಂತಲೂ ಮೊದಲೇ ಡಿ.ಕೆ.ಶಿವಕುಮಾರ್ ಮತ್ತು ತಾವು ಸ್ನೇಹಿತರು. ಯುವ ಕಾಂಗ್ರೆಸ್‍ನಲ್ಲಿ ಒಟ್ಟಿಗೇ ಕೆಲಸ ಮಾಡಿದ್ದೇವೆ. ರಾಜಕಾರಣಕ್ಕಾಗಿ ವ್ಯಕ್ತಿಗತ ವಿಶ್ವಾಸವನ್ನು ಕಳೆದುಕೊಳ್ಳಲಾಗುವುದಿಲ್ಲ ಎಂದರು.
6
+ ಲೋಕಸಭೆ ಚುನಾವಣೆಯಲ್ಲಿ ಎಚ್‍ಡಿಕೆ ಸ್ಪರ್ಧೆಗೆ ಹೆಚ್ಚಿದ ಒತ್ತಡ
7
+ ನಿನ್ನೆ ಅವರೊಂದಿಗಿನ ಭೇಟಿಯ ವೇಳೆ ಉಪಮುಖ್ಯಮಂತ್ರಿಯವರ ಜೊತೆ ತುಮಕೂರು, ಹಾಸನ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಕೆಲ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. ಕಾಂಗ್ರೆಸ್ ರಾಮಮಂದಿರ ಕಾರ್ಯಕ್ರಮದಿಂದ ದೂರ ಉಳಿದು ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುತ್ತಿದೆ ಎಂದು ಬಿಜೆಪಿಯವರ ಟೀಕೆ ಹಾಸ್ಯಾಸ್ಪದ. ಬಿಜೆಪಿಯವರು ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳನ್ನು ಸೇರಿಸಿ ¿ಶುಕ್ರಿಯಾ ಮೋದಿ ಬಾಯ್‍ಜಾನ್¿ ಸಮಾವೇಶ ಮಾಡುತ್ತಿದ್ದಾರೆ. ಇದು ರಾಜಕೀಯ ತುಷ್ಠೀಕರಣ ಅಲ್ಲವೇ ಎಂದು ಪ್ರಶ್ನಿಸಿದರು.
8
+ ಅಯೋಧ್ಯೆ ಕಾರ್ಯಕ್ರಮಕ್ಕೆ ಶಂಕರಾಚಾರ್ಯ ಪೀಠದ ಗುರುಗಳೇ ಭಾಗವಹಿಸುತ್ತಿಲ್ಲ. ಅವರೇನೂ ಕಾಂಗ್ರೆಸ್‍ನ ಸ್ವಾಮೀಜಿಗಳಲ್ಲ. ಸ್ವಾಮೀಜಿಗಳ ಅಭಿಪ್ರಾಯವನ್ನು ಗೌರವಿಸದೇ ರಾಜಕೀಯಕ್ಕೆ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಟೀಕಿಸಿದರು.
eesanje/url_46_264_7.txt ADDED
@@ -0,0 +1,6 @@
 
 
 
 
 
 
 
1
+ ಟೆಕ್ಕಿಗಳಿಂದ ಹಣದಾಸೆಗಾಗಿ ಮ್ಯಾಟ್ರೋಮೋನಿ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ
2
+ ಬೆಂಗಳೂರು, ಜ.11- ಇಬ್ಬರು ಸಾಫ್ಟ್‍ವೇರ್ ಎಂಜಿನಿಯರ್‍ಗಳು ಹಣದಾಸೆಗಾಗಿ ಮ್ಯಾಟ್ರೋಮೋನಿ ಹೆಸರಲ್ಲಿ ಆ್ಯಪ್ ತೆರೆದು ವೇಶ್ಯಾವಾಟಿಕೆ ನಡೆಸಿ ಪೊಲೀಸರಿಗೆ ಸಿಕ್ಕಿಬಿದ್ದು ಕಂಬಿ ಎಣಿಸುವಂತಾಗಿದೆ. ಒಬ್ಬ ಬೆಂಗಳೂರು, ಮತ್ತೊಬ್ಬ ತಮಿಳುನಾಡು ಮೂಲದ ಸಾಫ್ಟ್‍ವೇರ್ ಎಂಜಿನಿಯರ್‍ಗಳು ಈಗ ಜೈಲುಕಂಬಿ ಹಿಂದೆ ಇದ್ದಾರೆ.
3
+ ತಮಿಳುನಾಡು ಮೂಲದ ಟೆಕ್ಕಿ ಬಿಟೆಕ್ ಪದವೀಧರನಾಗಿದ್ದು, ಈತನ ಪರಿಚಯವಾಗಿ ಆತನ ಮಾತು ಕೇಳಿದ್ದಕ್ಕೆ ನಗರದ ಟೆಕ್ಕಿಯೂ ಜೈಲುಶಿಕ್ಷೆ ಅನುಭವಿಸುವಂತಾಗಿದೆ. ಸ್ಟಾಕ್ ಮಾರ್ಕೆಟ್‍ನಲ್ಲಿ ಹಣ ಹೂಡಿಕೆ ಮಾಡಿ ಕಳೆದುಕೊಂಡಿದ್ದ ಬೆಂಗಳೂರಿನ ಟೆಕ್ಕಿ ಲಕ್ಷಾಂತರ ಸಾಲ ಮಾಡಿಕೊಂಡಿದ್ದನು. ಹಾಗಾಗಿ ಸಾಫ್ಟ್‍ವೇರ್ ಕಂಪೆನಿಯ ಕೆಲಸಕ್ಕೆ ಗುಡ್‍ಬೈ ಹೇಳಿ ತಂತ್ರಜ್ಞಾನದಲ್ಲಿ ಆಸಕ್ತಿ ಹೊಂದಿದ್ದರಿಂದ ಮ್ಯಾಟ್ರೋಮೋನಿ ಆ್ಯಪ್ ತೆರೆದು ಯುವಕ-ಯುವತಿಯರಿಗೆ ಮದುವೆ ಮಾಡಿಸುತ್ತಿದ್ದರು.
4
+ ಲೋಕಸಭೆ ಚುನಾವಣೆಯಲ್ಲಿ ಎಚ್‍ಡಿಕೆ ಸ್ಪರ್ಧೆಗೆ ಹೆಚ್ಚಿದ ಒತ್ತಡ
5
+ ಆ ಸಂದರ್ಭದಲ್ಲಿ ಮತ್ತೊಬ್ಬ ತಮಿಳುನಾಡು ಮೂಲದ ಸಾಫ್ಟ್‍ವೇರ್ ಎಂಜಿನಿಯರ್ ಈ ಆ್ಯಪ್‍ಗೆ ಭೇಟಿ ಮಾಡಿ ನಂತರ ಇಬ್ಬರೂ ಸಂಪರ್ಕಿಸಿದ್ದಾರೆ. ಮ್ಯಾಟ್ರೋಮೋನಿಯಿಂದ ಹೆಚ್ಚಿನ ಹಣ ಸಂಪಾದಿಸಲು ಆಗಲ್ಲ, ಹಾಗಾಗಿ ವೇಶ್ಯಾವಾಟಿಕೆ ನಡೆಸಿದರೆ ಹಣ ಗಳಿಸಬಹುದು. ಅದಕ್ಕಾಗಿ ವಿದೇಶಿ ಮಹಿಳೆಯರನ್ನು ಬಳಸಿಕೊಳ್ಳಬಹುದೆಂದು ಬಿಟೆಕ್ ಪದವೀಧರ ಹೇಳಿದ್ದಾನೆ.
6
+ ಆತನ ಮಾತನ್ನು ನಂಬಿ ಇಬ್ಬರೂ ಸೇರಿಕೊಂಡು ಹೈಟೆಕ್ ವೇಶ್ಯಾವಾಟಿಕೆ ಆರಂಭಿಸಿದ್ದಾರೆ. ಇತ್ತೀಚೆಗೆ ಹೊಟೇಲ್‍ವೊಂದರ ಮೇಲೆ ಹಲಸೂರು ಠಾಣೆ ಪೊಲೀಸರು ದಾಳಿ ಮಾಡಿದಾಗ ವಿದೇಶಿ ಮಹಿಳೇ ಹಾಗೂ ಇಬ್ಬರು ಟೆಕ್ಕಿಗಳು ಸೇರಿದಂತೆ 9 ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಹಣದಾಸೆಗೆ ಈ ರೀತಿ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾರೆ.
eesanje/url_46_264_8.txt ADDED
@@ -0,0 +1,5 @@
 
 
 
 
 
 
1
+ ಹಾನಗಲ್‍ನಲ್ಲಿ ನೈತಿಕ ಪೊಲೀಸ್‍ಗಿರಿ : 7 ಮಂದಿ ಆರೋಪಿಗಳ ವಶ
2
+ ಹಾವೇರಿ,ಜ.11-ಅನ್ಯಕೋಮಿನ ಮಹಿಳೆಯೊಬ್ಬಳು ಪುರುಷನೊಂದಿಗೆ ಇದ್ದಾಗ ಹೋಟೆಲ್‍ಗೆ ನುಗ್ಗಿದ್ದ ಆರು ಮಂದಿ ಅವರ ಮೇಲೆ ಹಲ್ಲೆ ನಡೆಸಿ ಅಪಹರಿಸಿದ ಘಟನೆ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಜ.8 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಾನಗಲ್‍ನ ಹತ್ತಿರವಿರುವ ಲಾರ್ಜ್‍ಯೊಂದಕ್ಕೆ ಬಂದಿದ್ದ ಸ್ನೇಹಿತ ಸೋಮಶೇಖರನನ್ನು ಭೇಟಿ ಮಾಡಲು ಸಂತ್ರಸ್ತ ಮಹಿಳೆ ಹೋಗಿದ್ದಾಗ ಸುಮಾರು ನಾಲ್ಕೈದು ಜನ ರೂಮ್ ಒಳಗೆ ಏಕಾಏಕಿ ನುಗ್ಗಿ ಹಲ್ಲೆ ನಡೆಸಿದ್ದಾರೆ.
3
+ ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಅಡ್ವಾಣಿ
4
+ ನಂತರ ನನ್ನ ಮೇಲೂ ಹಲ್ಲೆ ನಡೆಸಿ ಯಾವುದೋ ಬೈಕ್‍ನಲ್ಲಿ ಕೂರಿಸಿಕೊಂಡು ಸ್ವಲ್ಪದೂರ ಹೋಗಿ ಅಲ್ಲಿ ಕೋಲು ಬಡಿಗೆಯಿಂದ ನನಗೆ ಹೊಡೆದು ನಿನಗೆ ಹಿಂದು ಹುಡುಗ ಬೇಕಾ ಎಂದು ನಿಂದಿಸಿ, ನಿನ್ನನ್ನು ಸುಮ್ನೆ ಬಿಡುವುದಿಲ್ಲ ಎಂದು ಧಮ್ಕಿ ಹಾಕಿ ಸುಮಾರು 4 ಗಂಟೆಗೆ ನನಗೆ 500 ರೂ. ನೀಡಿ ಅಲ್ಲಿಂದ ಬಿಟ್ಟು ಹೋಗಿದ್ದಾರೆಂದು ಸಂತ್ರಸ್ತ ಮಹಿಳೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೆಂದು ಹೇಳಲಾಗುತ್ತಿದೆ.
5
+ ಈ ಘಟನೆಗೆ ಸಂಬಂಧಿಸಿದಂತೆ ಹಾನಗಲ್‍ನ ಅಪ್ತಾಬ್ ಮಹಬೂಲ ಅಹಮದ್ (24) ಮದ್ರಾಸಾಬ್ ಮಹಮ್ಮದ್‍ಸಿಕ್, ಮಂದಾಕಿ (23) ಸಮಿಉಲ್ಲಾ ಲಾಲಾವುರ್, ಮಹಮ್ಮದ್ ಸೈಪ್, ಇಸ್ಮಾಯಿಲ್ ಮತ್ತು ಮುಲ್‍ಪಿಡ್ ಮುಲಾಲ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
eesanje/url_46_264_9.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ರಾಮಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್, ಕೆರಳಿದ ಕೇಸರಿ
2
+ ಬೆಂಗಳೂರು,ಜ.11- ಅಯೋಧ್ಯೆಯಲ್ಲಿ ಇದೇ 22 ರಂದು ನಡೆಯುವ ರಾಮನ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಲು ತೀರ್ಮಾನಿಸಿರುವ ಕಾಂಗ್ರೆಸ್ ನಿರ್ಧಾರವನ್ನೇ ಹಿಂದೂ ವಿರೋಧಿ ಎಂಬುದನ್ನು ಬಿಂಬಿಸಲು ಬಿಜೆಪಿ ಮುಂದಾಗಿದೆ.
3
+ ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿ ನಮ್ಮ ಭಾವನೆಗಳಿಗೆ ಧಕ್ಕೆ ತಂದಿರುವ ಕಾಂಗ್ರೆಸ್‍ಗೆ ಪಾಠ ಕಲಿಸುವಂತೆ ಮತದಾರರಿಗೆ ಮನವರಿಕೆ ಮಾಡಿಕೊಡುವ ಕಾರ್ಯತಂತ್ರವನ್ನು ರೂಪಿಸಲಾಗಿದೆ.
4
+ ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ್ ಜೋಷಿ, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಅನೇಕ ನಾಯಕರು ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ರಾಮಲಲ್ಲಾ ಟ್ರಸ್ಟ್ ಆಹ್ವಾನ ನೀಡಿದರೂ ಗೌರವಯುತವಾಗಿ ತಿರಸ್ಕರಿಸಿರುವ ಕಾಂಗ್ರೆಸ್‍ಗೆ ಬರಲಿರುವ ಚುನಾವಣೆಯಲ್ಲಿ ರಾಜ್ಯದ ಮತದಾರರು ತಕ್ಕ ಪಾಠ ಕಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
5
+ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ರಾಮನೇ ಕಾಲ್ಪನಿಕ ಎಂದವರು, ರಾಮನ ಅಸ್ತಿತ್ವವನ್ನು ಪ್ರಶ್ನಿಸಿದವರು, ರಾಮನ ಜನ್ಮಭೂಮಿ ಅಯೋಧ್ಯೆಯೇ ಎಂಬುದಕ್ಕೆ ಸಾಕ್ಷಿ ಕೇಳಿದವರು, ನ್ಯಾಯಾಲಯದ ಮೆಟ್ಟಿಲು ಹತ್ತಿದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಶ್ರದ್ಧಾ ಕೇಂದ್ರದ ವಿರುದ್ಧ ನಿಲ್ಲುತ್ತಾರೆಂದರೆ ಕಾಂಗ್ರೆಸಿಗರ ತುಷ್ಠೀಕರಣದ ನೀತಿ ಗಮನಿಸಿ ರಾಮನನ್ನು ನಿಂದಿಸಿದವರಿಗೆ ಕಾಲವೇ ಉತ್ತರ ನೀಡುತ್ತದೆ ಎಂದು ಆಕ್ರೋಶ ಹೊರಹಾಕಿದರು.
6
+ ಪ್ರಿಯಕರ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಂದ ಪಾಪಿ ಪತ್ನಿ
7
+ ಬಹುತೇಕ ಬಿಜೆಪಿ ನಾಯಕರು ಕಾಂಗ್ರೆಸ್‍ನ ನಿರ್ಧಾರದ ವಿರುದ್ಧ ಕೆಂಡ ಕಾರಿದ್ದು, ಬರಲಿರುವ ಚುನಾವಣೆಯಲ್ಲಿ ಇದು ಚುನಾವಣಾ ಅಸ್ತ್ರವಾಗುವ ಸಾಧ್ಯತೆ ಕಂಡುಬಂದಿದೆ. ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಬಿಜೆಪಿ, ರಾಮನ ಅಸ್ತ್ರವನ್ನು ಕಾಂಗ್ರೆಸ್‍ನ ವಿರುದ್ಧ ವ್ಯವಸ್ಥಿತ ಕಾರ್ಯತಂತ್ರವನ್ನು ರೂಪಿಸುವತ್ತ ಮಗ್ನವಾಗಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಟ್ರಸ್ಟ್ ವತಿಯಿಂದ ನಡೆಯುವ ಶ್ರೀ ರಾಮನ ಪ್ರಾಣಪ್ರತಿಷ್ಠಾನ ಕಾರ್ಯಕ್ರಮಕ್ಕೆ ನೀಡಿರುವ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿತ್ತು.
8
+ ಲೋಕಸಭೆ ಚುನಾವಣೆಯಲ್ಲಿ ಶ್ರೀ ರಾಮನ ಜಪದ ಮೂಲಕವೇ ಹೆಚ್ಚಿನ ಸ್ಥಾನ ಗಳಿಸಲು ಭಾವನಾತ್ಮಕ ಅಸ್ತ್ರ ��ಳಸಲಿದ್ದಾರೆ ಎಂದು ಗೊತ್ತಾಗಿದೆ. ಮೇಲ್ನೋಟಕ್ಕೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಹಿಂದೂಪರ ಸಂಘಟನೆಗಳು ನಡೆಸುತ್ತಿದ್ದರೂ ಇದರ ಸಂಪೂರ್ಣ ಲಾಭವನ್ನು ಬಿಜೆಪಿ ಬಳಸಿಕೊಳ್ಳಲು ಮುಂದಾಗಿದೆ.ಈಗಾಗಲೇ ಮನೆಮನೆಗೆ ಅಕ್ಷತೆಯನ್ನು ನೀಡುವ ಮೂಲಕ ಹಿಂದೂ ಮತಗಳ ಕ್ರೂಢೀಕರಣಕ್ಕೆ ಸಜ್ಜಾಗಿರುವ ಬಿಜೆಪಿ, ತನ್ನ ಚುನಾವಣಾ ಪ್ರಚಾರದಲ್ಲೂ ಕಾಂಗ್ರೆಸ್ ನಿರ್ಧಾರವನ್ನು ಪ್ರಸ್ತಾಪಿಸಲಿದೆ.
9
+ ವೈದ್ಯ ಹೇಳಿದ್ದೂ ಹಾಲು ಅನ್ನ, ರೋಗಿ ಬಯಸಿದ್ದೂ ಅದನ್ನೇ ಎನ್ನುವಂತೆ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬಂದರೆ ಅದರ ಶ್ರೇಯಸ್ಸು ಆ ಪಕ್ಷಕ್ಕೇ ಸಲ್ಲುತ್ತದೆ ಎಂಬ ಆತಂಕ ಇತ್ತು. ಹೀಗಾಗಿ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬರಲೇಬಾರದೆಂಬ ಆಲೋಚನೆಯಲ್ಲಿತ್ತು. ಯಾವಾಗ ಕಾಂಗ್ರೆಸ್‍ನಿಂದ ಅಧಿಕೃತ ಆದೇಶ ಹೊರಬಿತ್ತೋ, ಆಗ ಬಿಜೆಪಿ ಒಳಗೊಳಗೇ ಖುಷಿ ಪಡುತ್ತಿದೆ.
10
+ ಲೋಕಸಭೆ ಚುನಾವಣೆ ಕಸರತ್ತು, ದೆಹಲಿಗೆ ದೌಡಾಯಿಸಿದ ಸಚಿವರು
11
+ ಚುನಾವಣಾ ಸಂದರ್ಭದಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದರೆ ಒಂದು ಸಮುದಾಯದ ಮತಗಳು ದೂರ ಸರಿಯಬಹುದು ಎಂಬ ಕಾರಣಕ್ಕಾಗಿ ಈ ತೀರ್ಮಾನಕ್ಕೆ ಬಂದಿದೆ. ಇದು ಹಿಂದೂಗಳಿಗೆ ಮಾಡಿದ ಅಪಮಾನ ಎಂದು ಬಿಂಬಿಸಲು ಬಿಜೆಪಿ ಸಜ್ಜಾಗಿದೆ. ಪ್ರಚಾರದ ಸಂದರ್ಭದಲ್ಲಿ ಈ ಅಸ್ತ್ರವನ್ನೇ ಬಳಸಬೇಕೆಂದು ಹೈಕಮಾಂಡ್ ಕೂಡ ಸೂಚಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ರಾಮನ ಜಪ ಮುನ್ನಲೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
12
+ ರಾಜ್ಯ ಬಿಜೆಪಿ ಘಟಕದ ನಾಯಕರು ಇದನ್ನೇ ಚುನಾವಣಾ ಸಂದರ್ಭದಲ್ಲಿ ಪ್ರಚಾರ ನಡೆಸಬೇಕು. ಗ್ರಾಮ ಮಟ್ಟದಿಂದ ಹಿಡಿದು ಹೋಬಳಿ ಹಂತದವರೆಗೂ ಬಿಜೆಪಿ ಹಿಂದೂಪರ ಎಂಬುದನ್ನು ಕಾರ್ಯಕರ್ತರಿಗೆ ಮನವರಿಕೆ ಮಾಡಬೇಕು ಎಂದು ವರಿಷ್ಠರು ಸೂಚನೆ ಕೊಟ್ಟಿದ್ದಾರೆ.
eesanje/url_46_265_1.txt ADDED
@@ -0,0 +1,9 @@
 
 
 
 
 
 
 
 
 
 
1
+ ಪ್ರಿಯಕರ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಂದ ಪಾಪಿ ಪತ್ನಿ
2
+ ಕೋಲಾರ,ಜ.11- ಅಕ್ರಮ ಸಂಬಂದಕ್ಕೆ ಅಡ್ಡಿಯಾದ ಗಂಡನನ್ನೇ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿದ್ದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಬೇತಮಂಗಲ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಜಿಎಫ್ ತಾಲ್ಲೂಕು ಕೋಗಿಲಹಳ್ಳಿ ಗ್ರಾಮದ ಶಂಕರ ರೆಡ್ಡಿ ಕೊಲೆಯಾದ ವ್ಯಕ್ತಿ. ಇವರನ್ನು ಕೊಂದಿದ್ದ ಪತ್ನಿ ಸುನಂದ ಹಾಗೂ ಆಕೆಯ ಪ್ರಿಯಕರ ವೆಂಕಟೇಶ್ ಬಂಧಿತ ಆರೋಪಿಗಳಾಗಿದ್ದಾರೆ.
3
+ ಘಟನೆ ವಿವರ:ಕಳೆದ ಹದಿನೈದು ವರ್ಷಗಳ ಹಿಂದೆ ಶಂಕರ ರೆಡ್ಡಿ -ಸುನಂದ ವಿವಾಹವಾಗಿತ್ತು ಆರಂಭದಲ್ಲಿ ಇಬ್ಬರು ಸುಖವಾಗಿದ್ದರು ಅವರಿಗಿದ್ದ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದರು ಆದರೆ ಕಳೆದ ವರ್ಷ ಮಳೆ ಬಾರದೆ ನೀರಿನ ಅಭಾವ ಉಂಟಾಗಿ ವವಸಾಯ ಮಾಡಲಾಗದೆ ಬೆಂಗಳೂರಿನ ವೈಟ್‍ಫೀಲ್ಡ್ ಬಳಿಯ ನಲ್ಲೂರಹಳ್ಳಿ ಬಳಿ ಟೀ ಅಂಗಡಿಯೊಂದನ್ನು ಇಟ್ಟುಕೊಂಡು ಅಲ್ಲೇ ಪುಟ್ಟದೊಂದು ಬಾಡಿಗೆ ಮನೆ ಮಾಡಿಕೊಂಡು ,ನೆಮ್ಮದಿಯ ಜೀವನ ನೆಡೆಸುತ್ತಿದ್ದರು.
4
+ ಜೀವನ ತಕ್ಕಮಟ್ಟಿಗೆ ನಡೆದುಕೊಂಡು ಹೋಗುತ್ತಿತ್ತು, ಆದರೆ ಕೆಲವು ವರ್ಷಗಳ ಹಿಂದೆ ಅಲ್ಲೇ ಡ್ರೈವರ್ ಕೆಲಸ ಮಾಡಿಕೊಂಡಿದ್ದ ವೆಂಕಟೇಶ್ ಎಂಬಾತ ಶಂಕರ್‍ರೆಡ್ಡಿ ವಾಸವಿದ್ದ ಮನೆಯ ಬಳಿ ಬಾಡಿಗೆಗೆ ಬಂದಿದ್ದ, ವೆಂಕಟೇಶ್‍ಗೆ ಶಂಕರ್‍ರೆಡ್ಡಿ ಕುಟುಂಬದೊಂದಿಗೆ ಪರಿಚಯವಾಗಿತ್ತು ಅದೇ ಪರಿಚಯ ಸಲುಗೆಯಾಗಿ ಬೆಳೆದಿತ್ತು, ಸುನಂದಾ ಜೊತೆಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ ಎನ್ನಲಾಗಿದೆ.
5
+ ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ
6
+ ಆ ವಿಷಯ ಶಂಕರ್‍ರೆಡ್ಡಿಗೆ ತಿಳಿದು ಬೇಸರಗೊಂಡು ಅಂಗಡಿ ಮುಚ್ಚಿ ಮನೆ ಖಾಲಿ ಮಾಡಿ ಬೆಂಗಳೂರು ಬಿಟ್ಟು ಮತ್ತೆ ಕೋಗಿಲಹಳ್ಳಿ ಗ್ರಾಮಕ್ಕೆ ಇತ್ತೀಚೆಗೆ ವಾಪಸ್ಸಾಗಿದ್ದರು. ಆದರೆ ಇದು ಸುನಂದಾಗೆ ಇಷ್ಟವಿರಲಿಲ್ಲ. ಕಳೆದ ಡಿ.27 ರಂದು ಶಂಕರ್‍ರೆಡ್ಡಿಯನ್ನು ಕರೆಸಿಕೊಂಡು ಕಾರಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚಾರ್ಲಹಳ್ಳಿ ಬಳಿ ಜಾಕ್ ರಾಡ್‍ನಿಂದ ಹೊಡೆದು ಕೊಲೆ ಮಾಡಿ ನಂತರ ಶವವನ್ನು ಬೆಂಗಳೂರಿನ ಹೆಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂಹಳ್ಳಿ ಬಳಿಯ ದೊಡ್ಡ ಚರಂಡಿಯೊಂದಕ್ಕೆ ಬಿಸಾಡಿ ನಂತರ ತಲೆ ಮರೆಸಿಕೊಂಡಿದ್ದ.
7
+ 2 ದಿನದ ನಂತರ ಬೇತಮಂಗಲ ಪೊಲೀಸ್ ಠಾಣೆಗೆ ಬಂದ ಸುನಂದ ತನ್ನ ಪತಿ ಶಂಕರ್‍ರೆಡ್ಡಿ ಕಾಣೆಯಾಗಿದ್ದಾರೆಂದು ದೂರು ನೀಡಿದ್ದರು. ದೂರಿನ ಹಿನ್ನೆಲೆ ಬೇತಮಂಗಲ ಪೊಲೀಸರು ನಾಪತ್ತೆ ಪ್ರಕರಣ ದಾಖಲು ಮಾಡಿಕೊಂಡಿದ್ದರು ಇದಾದ ಕೆಲವೇ ಗಂಟೆಯಲ್ಲಿ ಶಂಕರ್ ರೆಡ್ಡಿಯ ಸಂಬಂಧಿಕ ಬಾಬು ರೆಡ್ಡಿ ಎಂಬಾತ ಮತ್ತೊಂದು ದೂರು ನೀಡಿ ಸುನಂದ ಕೊಲೆ ಮಾಡಿಸಿದ್ದಾಳೆ ಎಂದು ಆರೋಪಿಸಿದ್ದರು.
8
+ ಪ್ರಕರಣದ ಗಂಭೀರತೆ ಅರಿತ ಪೊಲೀಸರು ಈ ಎರಡು ದೂರನ್ನು ಸ್ವೀಕರಿಸಿದ್ದ ಕಳೆದ ಹತ್ತು ದಿನಗಳಿಂದ ಕಾಣೆಯಾದವನು ಜೀವಂತವಾಗಿದ್ದಾನಾ, ಇಲ್ವಾ? ಒಂದು ವೇಳೆ ಅವನು ಕೊಲೆಯಾಗಿದ್ದರೆ ಆತನ ಶವ ಎಲ್ಲಿದೆ ಅನ್ನೋದನ್ನು ಪೊಲೀಸರು ಹುಡುಕಾಡಿದರು.ಆದರೆ ಯಾವುದೇ ಮಾಹಿತಿ ಸಿಗಲಿಲ್ಲ. ಅಷ್ಟೇ ಅಲ್ಲದೆ ಸುನಂದ ಪ್ರಿಯಕರ ವೆಂಕಟೇಶ್ ಕೂಡಾ ನಾಪತ್ತೆಯಾಗಿದ್ದ. ಹಾಗಾಗಿ ಪೊಲೀಸರಿಗೆ ಇದೊಂದು ಪ್ರಕರಣ ಗೊಂದಲದ ಗೂಡಾಗಿತ್ತು.
9
+ ಈ ವೇಳೆ ಇದ್ದಕ್ಕಿದಂತೆ ವೆಂಕಟೇಶ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆತನ ವಿಚಾರಣೆ ಮಾಡಿದ ಪೊಲೀಸರಿಗೆ ಅಸಲಿಯತ್ತು ಒಂದೊಂದಾಗಿ ಗೊತ್ತಾಗಿ ಕೊಲೆ ರಹಸ್ಯ ಬಯಲಿಗೆ ಬಂದಿದೆ. ನಾಪತ್ತೆಯಾಗಿದ್ದ ಸುನಂದಾ ಕೂಡ ಬಲೆಗೆ ಬಿದ್ದಿದ್ದು ಇಬ್ಬರನ್ನು ಬಂಧಿಸಲಾಗಿದೆ ಒಟ್ಟಾರೆ ಚಪಲಕ್ಕೆ ಬಿದ್ದ ಹೆಣ್ಣು ಸುಂದರವಾಗಿದ್ದ ಸಂಸಾರವನ್ನು ಹೇಗೆ ಹಾಳು ಮಾಡಬಹುದು ಅನ್ನೋದಕ್ಕೆ ಇದೊಂದು ಜೀವಂತ ಸಾಕ್ಷಿ,
eesanje/url_46_265_10.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸ್ಲೀವ್‌ಲೆಸ್ ಡ್ರೆಸ್, ಸ್ಕರ್ಟ್, ಮಿಡಿ, ಪ್ಯಾಂಟ್ ಧರಿಸಿ ದೇವಸ್ಥಾನ ಪ್ರವೇಶಿಸುವಂತಿಲ್ಲ
2
+ ಬೆಂಗಳೂರು : ಇಂದು ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜೈನ್ ನ ಶ್ರೀ ಮಹಾಕಾಲೇಶ್ವರ ದೇವಸ್ಥಾನ, ವಾರಾಣಸಿಯ ಶ್ರೀಕಾಶಿ ವಿಶ್ವೇಶ್ವರ ದೇವಸ್ಥಾನ, ತಿರುಪತಿ ಬಾಲಾಜಿ ದೇವಸ್ಥಾನ, ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ, ಹೀಗೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅನೇಕ ವರ್ಷಗಳಿಂದ ಭಕ್ತರಿಗಾಗಿ ಸಾತ್ತ್ವಿಕ ವಸ್ತ್ರ ಸಂಹಿತೆ ಜಾರಿಯಿದೆ.
3
+ ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಧಾರ್ಮಿಕ ಪರಿಷತ್ ಸಹ ರಾಜ್ಯದ 211 ಎ ಗ್ರೇಡ್ ದೇವಸ್ಥಾನಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಿತ್ತು. ಈಗಾಗಲೇ ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ದ ದೇವಿರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರಸಂಹಿತೆ ಜಾರಿ ಮಾಡಿದೆ.
4
+ ದೇವಿರಮ್ಮನ ದೇವಾಲಯದಲ್ಲಿ ಸ್ಕರ್ಟ್, ಮಿಡಿ, ಸ್ಲೀವ್‌ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಅದರ ಆಧಾರದಲ್ಲಿ ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡುವುದಕ್ಕಾಗಿ, ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಅಧಿವೇಶನದಲ್ಲಿ ರಾಜ್ಯದ 500 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮತ್ತು ಬೆಂಗಳೂರಿನ 50 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯೋಜಕ ಶ್ರೀ. ಮೋಹನ್ ಗೌಡ ಹೇಳಿದರು. ಅವರು ಬೆಂಗಳೂರಿನ ವಸಂತ ನಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಅಯೋಜಿಸಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಅವರು ಮುಂದೆ ಮಾತನಾಡಿ, ಬೆಂಗಳೂರಿನ ನಂತರ ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವುದಕ್ಕಾಗಿ ವ್ಯಾಪಕ ಅಭಿಯಾನ ನಡೆಸಿ ಭಕ್ತರಲ್ಲಿ ವಸ್ತ್ರ ಸಂಹಿತೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.
5
+ ವಿಜಯ್-ರಶ್ಮಿಕಾ ಮದ್ವೆ ಫಿಕ್ಸ್, ಫೆಬ್ರವರಿಯಲ್ಲಿ ನಿಶ್ಚಿತಾರ್ಥ..?
6
+ ಪ್ರತೀ ದೇವಸ್ಥಾನಗಳ ಮುಂಭಾಗದಲ್ಲಿ ವಸ್ತ್ರ ಸಂಹೀತೆಯ ಫಲಕಗಳನ್ನು ಹಾಕಿ ಜನಪ್ರಭೋಧನೆ ಮಾಡುವುದು, ದೇವಸ್ಥಾನದ ಪಾವಿತ್ರ್ಯತೆಯ ರಕ್ಷಣೆ ಮತ್ತು ಭಾರತೀಯ ಸಂಸ್ಕೃತಿಯ ಪಾಲನೆಯಾಗುವ ಉದ್ದೇಶದಿಂದ ದೇವಸ್ಥಾನಕ್ಕೆ ಬರುವ ಭಕ್ತರು ತುಂಡು ಬಟ್ಟೆ ಧರಿಸುವ ಬದಲು, ಭಾರತೀಯ ಸಂಸ್ಕೃತಿಯ ಪಾಲನೆ ಮಾಡಿ ದೇವಸ್ಥಾನ ವ್ಯವಸ್ಥಾಪನೆಗೆ ಸಹಕರಿಸಲು ಜನಜಾಗೃತಿ ಮೂಡಿಸಲಾಗುವುದು.
7
+ ಭಾರತೀಯ ಸಾತ್ವಿಕ ಉಡುಪುಗಳು :ಮಹಿಳೆಯರು ಚುಡಿದಾರ, ಲಂಗ-ದಾವಣಿ, ಸಲ್ವಾರ್-ಕುರ್ತಾ ಜೊತೆಗೆ ಸೀರೆ, ಓಡಾಣಿ ಮುಂತಾದ ಪಾರಂಪರಿಕ ಸಾತ್ವಿಕ ವೇಷಭೂಷಣಗಳನ್ನು ಧರಿಸಬೇಕು ಮತ್ತು ಪುರುಷರು ಕುರ್ತಾ, ಧೋತಿ, ಲುಂಗಿ ಅಥವಾ ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್‌ಗಳನ್ನು ಹಾಕಬೇಕು.
8
+ ಆಧುನಿಕ ಅಸಾತ್ವಿಕ ಉಡುಪುಗಳು :ಪಾಶ್ಚಿಮಾತ್ಯ ಉಡುಪುಗಳಲ್ಲಿ ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್, ಸ್ಕರ್ಟ್, ಸ್ಲೀವ್‌ಲೆಸ್ ಡ್ರೆಸ್, ನೈಟ್ ಡ್ರೆಸ್, ಸಾಕ್ಸ್ ಇತ್ಯಾದಿ ಉಡುಪುಗಳನ್ನು ಹಾಕಬಾರದೆಂದು ವಿನಂತಿಸುತ್ತೇವೆ.
9
+ ದೇವಸ್ಥಾನಗಳನ್ನು ಧರ್ಮ ಪ್ರಚಾರ ಕೇಂದ್ರವನ್ನಾಗಿ ಮಾಡುವುದು. :ದೇವಸ್ಥಾನಗಳ ಸಂವರಕ್ಷಣೆ, ಸಂಘಟನೆಯ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲ ಸ್ಥರದ ಅಧಿವೇಶನಗಳನ್ನು ಮಾಡಿ, ದೇವಸ್ಥಾನಗಳ ಸಂಘಟನೆ ಮಾಡಲಾಗುವುದು. ಅದಲ್ಲದೇ ಹಿಂದೂ ಸಮಾಜಕ್ಕೆ ಹಿಂದೂ ಧರ್ಮದ ಬಗ್ಗೆ ಶಿಕ್ಷಣ ನೀಡಲು ಮುಂದಿನ ದಿನಗಳಲ್ಲಿ ರಾಜ್ಯದ 50 ದೇವಸ್ಥಾನಗಲ್ಲಿ ಮಕ್ಕಳು, ಸ್ತ್ರೀ-ಪುರುಷರಿಗೆ ನಿಯಮಿತಿವಾಗಿ ಹಿಂದೂ ಧರ್ಮದ ಶಿಕ್ಷಣ ನೀಡುವ ವರ್ಗಗಳ್ನು ಸಹ ಪ್ರಾರಂಭ ಮಾಡಲಾಗುವುದು. ಇದಕ್ಕೆ ಸಂಬಂದಿಸಿ ಒಂದು ಪಠ್ಯಕೃಮವನ್ನು ಸಹ ರಚಿಸಲಾಗಿದೆ. ಈಗಾಗಲೇ ರಾಜ್ಯದ 300 ಸ್ಥಳಗಳಲ್ಲಿ ಈ ವರ್ಗ ಪ್ರಾರಂಭಿಸಲಾಗಿದೆ. ಮುಂದೆ ಪ್ರತಿ ದೇವಸ್ಥಾನಗಳಲ್ಲಿ ಹಿಂದೂ ಧರ್ಮ ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು.
10
+ ಇದಲ್ಲದೇ ಕರ್ನಾಟಕದಲ್ಲಿ ಮಾನ್ಯ ಧಾರ್ಮಿಕ ದತ್ತಿ ಇಲಾಖೆಯ ಸಚಿವರನ್ನು ಭೇಟಿ ಮಾಡಿ ಸರಕಾರಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ, ಧರ್ಮ ಶಿಕ್ಷಣ ಪಲಕಗಳನ್ನು ಅಳವಡಿಸಲು ಮನವಿ ನೀಡಲಾಗುವುದು. ಎಂದು ಮೋಹನ್ ಗೌಡ ಹೇಳಿದರು.
eesanje/url_46_265_11.txt ADDED
@@ -0,0 +1,8 @@
 
 
 
 
 
 
 
 
 
1
+ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಭೆಯಲ್ಲಿ ರೊಚ್ಚಿಗೆದ್ದ ಭಗವಂತ ಕೂಬಾ
2
+ ಬೆಂಗಳೂರು,ಜ.10- ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕರೆದಿದ್ದ ಸಭೆಯಲ್ಲಿ ಕೇಂದ್ರ ಸಚಿವ ಹಾಗೂ ಬೀದರ್ ಸಂಸದ ಭಗವಂತ ಕೂಬಾಗೆ ಟಿಕೆಟ್ ನೀಡಿರುವುದಕ್ಕೆ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸಭೆಯಲ್ಲಿ ಗದ್ದಲ ಉಂಟಾಗಿದೆ. ಶಾಸಕರಾದ ಪ್ರಭು ಚವ್ಹಾಣ್ ಮತ್ತು ಶರಣು ಸಲಗಾರ ಸೇರಿದಂತೆ ಜಿಲ್ಲೆಯ ಮುಖಂಡರು ಮುಂಬರುವ ಚುನಾವಣೆಯಲ್ಲಿ ಭಗವಂತ ಕೂಬಾಗೆ ಟಿಕೆಟ್ ನೀಡಬಾರದೆಂದು ಪಕ್ಷದ ವರಿಷ್ಠರಿಗೆ ಒತ್ತಾಯ ಮಾಡಿದರು.
3
+ ಇದರಿಂದ ಕೆರಳಿ ಕೆಂಡವಾದ ಕೂಬಾ, ನನಗೆ ಟಿಕೆಟ್ ಕೊಡಬಾರದೆಂದು ಹೇಳಲು ನೀವ್ಯಾರು? ನಾನು ಸ್ಪರ್ಧೆ ಮಾಡಬೇಕೋ ಬೇಡ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ನೀವು ನಿಮ್ಮ ಅಭಿಪ್ರಾಯಗಳನ್ನು ಮಾತ್ರ ಹೇಳಬೇಕೆ ಹೊರತು ಟಿಕೆಟ್ ನೀಡಬಾರದೆಂದು ಹೇಳಿದರೆ ಅದನ್ನು ಕೇಳಿಸಿಕೊಂಡು ನಾನು ಸುಮ್ಮನಿರಬೇಕೆ ಎಂದು ಪ್ರಶ್ನೆ ಮಾಡಿದರು.
4
+ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೇ..?
5
+ ಈ ವೇಳೆ ಸಭೆಯ ಮಧ್ಯ ಭಾಗದಲ್ಲಿ ಕುಳಿತಿದ್ದ ಪ್ರಭು ಚವ್ಹಾಣ್ ಹಾಗೂ ಶರಣು ಸಲಗಾರ ವೇದಿಕೆಯತ್ತ ದೌಡಾಯಿಸಿ ಭಗವಂತ ಕೂಬಾ ವಿರುದ್ಧ ಏರಿದ ಧ್ವನಿಯಲ್ಲೇ ತಿರುಗಿಬಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀವು ನಮ್ಮ ವಿರುದ್ಧ ಪ್ರಚಾರ ಮಾಡಿದ್ದೀರಿ. ನಮ್ಮನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಶಾಮೀಲಾಗಿ ಅಪಪ್ರಚಾರ ನಡೆಸಿದ್ದೀರಿ. ಆದರೆ ಕಾರ್ಯಕರ್ತರು ನಮ್ಮನ್ನು ಕೈಬಿಡದಿದ್ದರಿಂದ ನಾವು ಗೆದ್ದುಬಂದೆವು.
6
+ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ನಿಮ್ಮ ಪರವಾಗಿ ನಾವು ಹೇಗೆ ಪ್ರಚಾರ ನಡೆಸಬೇಕು. ಸಂಸದರಾದ ಮೇಲೆ ಒಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಮನೆಗೆ ಬಂದವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳುವುದಿಲ್ಲ. ಪ್ರತಿಯೊಬ್ಬರನ್ನು ಸೊಕ್ಕು, ಮಾಕು ಮತ್ತು ಅಹಂನಿಂದಲೇ ಮಾತನಾಡಿಸುತ್ತಿದ್ದೀರಿ, ನೀವು ಕೂಡ ಮೊದಲು ಕಾರ್ಯಕರ್ತರಾಗಿದ್ದೀರಿ ಎಂಬುದನ್ನು ಮರೆಯಬಾರದು ಎಂದು ತಿರುಗೇಟು ನೀಡಿದರು.
7
+ ಇದರಿಂದ ಕುಪಿತರಾದ ಭಗವಂತ ಕೂಬಾ ಲೋಕಸಭೆ ಚುನಾವಣೆಯಲ್ಲಿ ನೀವು ಏನೇನು ಮಾಡಿದ್ದೀರಿ ಎಂಬುದು ನನಗೂ ಗೊತ್ತು. ಪಕ್ಷ ಹೇಳಿದಂತೆ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದೇನೆ. ನಿಮ್ಮಿಬ್ಬರ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ನನಗೆ ಪಕ್ಷ ವಿರೋ ಹಣೆಪಟ್ಟಿ ಕಟ್ಟಿದರೆ ಮೌನ ವಹಿಸಬೇಕೇ? ಎಂದು ಮರುಪ್ರಶ್ನಿಸಿದರು.
8
+ ಅಂತಿಮವಾಗಿ ಮಧ್ಯಪ್ರವೇಶ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇಲ್ಲಿ ಕೇವಲ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತದೆ. ನಾವು ಯಾರೊಬ್ಬರೂ ಅಭ್ಯರ್ಥಿಗಳ ಆಯ್ಕೆ ನಡೆಸುವುದಿಲ್ಲ. ಏನಿದ್ದರೂ ಪಕ್ಷದ ಸಂಸದೀಯ ಮಂ���ಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ತೀರ್ಮಾನಿಸುತ್ತದೆ. ಅಭ್ಯರ್ಥಿ ಯಾರು ಎನ್ನುವುದಕ್ಕಿಂತ ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೆಂದು ಸೂಚಿಸಿದರು.
eesanje/url_46_265_12.txt ADDED
@@ -0,0 +1,5 @@
 
 
 
 
 
 
1
+ ಜ.28ರಂದು ಸಿಎಆರ್-ಡಿಎಎಆರ್ ಹುದ್ದೆಗೆ ಲಿಖಿತ ಪರೀಕ್ಷೆ
2
+ ಬೆಂಗಳೂರು,ಜ.10- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‍ಸ್ಟೆಬಲ್ (ಸಿಎಆರ್-ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಜ.28ರಂದು ಲಿಖಿತ ಪರೀಕ್ಷೆ ರಾಜ್ಯಾದ್ಯಂತ ನಡೆಯಲಿದೆ.
3
+ ಅಂದು ಬೆಳಗ್ಗೆ 11ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಗೆ ಎಸ್‍ಎಂಎಸ್ ಮೂಲಕ ಮುಂಬರುವ ದಿನಗಳಲ್ಲಿ ಕರೆಪತ್ರದ ಮಾಹಿತಿ ನೀಡಲಾಗುವುದು.
4
+ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೇ..?
5
+ ಕರಪತ್ರದಲ್ಲಿ ಲಿಂಕ್ ಸಹ ಕಳುಹಿಸಲಾಗುವುದು. ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ನೇಮಕಾತಿ ಸಮಿತಿಯ ಸಮನ್ವಯ ಅಧಿಕಾರಿ ಯಡಾ ಮಾರ್ಟನ್ ಮಾರ್ಬನ್ಯಾಂಗ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
eesanje/url_46_265_2.txt ADDED
@@ -0,0 +1,8 @@
 
 
 
 
 
 
 
 
 
1
+ ಲೋಕಸಭೆ ಚುನಾವಣೆ ಕಸರತ್ತು, ದೆಹಲಿಗೆ ದೌಡಾಯಿಸಿದ ಸಚಿವರು
2
+ ಬೆಂಗಳೂರು,ಜ.11-ಲೋಕಸಭೆ ಚುನಾವಣೆಯ ತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇಂದು ದೇಶಾದ್ಯಂತ ನೇಮಕವಾಗಿರುವ ಕ್ಷೇತ್ರವಾರು ವೀಕ್ಷಕರ ಜೊತೆ ಸಮಾಲೋಚನೆ ನಡೆಸಿದೆ. ರಾಜ್ಯ ಕಾಂಗ್ರೆಸ್‍ನ 28 ಸಚಿವರು ಈ ಸಭೆಯಲ್ಲಿ ಭಾಗವಹಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕಳೆದ ಮೂರು ದಿನಗಳಿಂದಲೂ ಬೆಂಗಳೂರಿನಲ್ಲಿ ಸಭೆ ನಡೆಸಿ ವಿವಿಧ ಹಂತಗಳಲ್ಲಿ ಚರ್ಚೆ ನಡೆಸಿದರು.
3
+ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಪ್ರಮುಖ ಶಾಸಕರು, ಜಿಲ್ಲಾಧ್ಯಕ್ಷರು, ಕೆಪಿಸಿಸಿ ಪ್ರಧಾಧಿಕಾರಿಗಳು ಸೇರಿದಂತೆ ಹಲವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ದೆಹಲಿಗೆ ತೆರಳಿದ್ದಾರೆ. ಅದರ ಬೆನ್ನಲ್ಲೇ ಚುನಾವಣೆ ವೀಕ್ಷಕರಾಗಿರುವ ಎಲ್ಲರೂ ದೆಹಲಿಗೆ ಬರಬೇಕೆಂದು ಹೈಕಮಾಂಡ್ ಸೂಚಿಸಿತ್ತು. ಅದರ ಪ್ರಕಾರ 28 ಲೋಕಸಭಾ ಕ್ಷೇತ್ರಗಳ ವೀಕ್ಷಕರಾಗಿ ನಿಯೋಜನೆಗೊಂಡಿರುವ ಸಚಿವರು ಇಂದು ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ.
4
+ 28 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ : ಸಚಿವ ಮುನಿಯಪ್ಪ
5
+ ದೇಶಾದ್ಯಂತ ವಿವಿಧ ರಾಜ್ಯಗಳ ವೀಕ್ಷಕರೊಂದಿಗೆ ಸಭೆ ಆಯೋಜನೆಗೊಂಡಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖ ನಾಯಕ ರಾಹುಲ್‍ಗಾಂಧಿ ಸೇರಿದಂತೆ ಹಲವಾರು ಮಂದಿ ಸಭೆಯಲ್ಲಿ ವೀಕ್ಷಕರೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರತಿಯೊಂದೂ ರಾಜ್ಯಗಳಿಗೂ ಸಂಬಂಧಪಟ್ಟಂತೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲಾಗಿದೆ. ಬಿಜೆಪಿ ಹಿಂದುತ್ವದ ಆಧಾರದ ಮೇಲೆ ಈ ಬಾರಿ ಲೋಕಸಭೆ ಚುನಾವಣೆಯನ್ನು ಎದುರಿಸಲು ಮುಂದಾಗಿದ್ದು, ಇದಕ್ಕೆ ಪ್ರತಿತಂತ್ರವಾಗಿ ಕಾಂಗ್ರೆಸ್ ಅಭಿವೃದ್ಧಿಯ ಅಜೆಂಡಾವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದೆ.
6
+ ಈ ಬಗ್ಗೆ ಹೈಕಮಾಂಡ್ ನಾಯಕರು ಚುನಾವಣಾ ವೀಕ್ಷಕರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಹೇಳಲಾಗಿದೆ. ಚುನಾವಣಾ ಫಲಿತಾಂಶ ಸೋಲು, ಗೆಲುವಿಗೆ ವೀಕ್ಷಕರೇ ಹೊಣೆಗಾರರು ಎಂಬ ಸ್ಪಷ್ಟ ಸಂದೇಶ ಕಳುಹಿಸಲಾಗಿದೆ. ಕ್ಷೇತ್ರಗಳ ಮಟ್ಟದಲ್ಲಿ ಆಂತರಿಕ ಭಿನ್ನಮತಗಳನ್ನು ಸರಿದೂಗಿಸಲು ಮೊದಲ ಆದ್ಯತೆ ನೀಡಬೇಕು. ಅನಂತರ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು, ತತ್ವ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸಬೇಕು.
7
+ ಕೇಂದ್ರ ಸರ್ಕಾರದ ವೈಫಲ್ಯವನ್ನು ವಿಭಜನೆಯ ರಾಜಕಾರಣ, ವಿವಿಧ ಕ್ಷೇತ್ರಗಳಲ್ಲಿ ಹಣಕಾಸು ಹಾಗೂ ಅಧಿಕಾರ ದುರುಪಯೋಗ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ವೀಕ್ಷಕರ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಇದನ್ನು ಜನರಿಗೆ ತಲುಪಿಸಲು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕೆಂದು ಹೈಕಮಾಂಡ್ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
8
+ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅನುಪಸ್ಥಿತಿಯಲ್ಲಿ ಹೈಕಮಾಂಡ್ ಸಂಪುಟದ 28 ಸಚಿವರ ಜೊತೆಗೂ ಚುನಾವಣಾ ���ಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದೆ.
eesanje/url_46_265_3.txt ADDED
@@ -0,0 +1,7 @@
 
 
 
 
 
 
 
 
1
+ ನೈತಿಕ ಪೊಲೀಸ್‍ಗಿರಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ್ ಸೂಚನೆ
2
+ ಬೆಂಗಳೂರು,ಜ.11- ನೈತಿಕ ಪೊಲೀಸ್‍ಗಿರಿ ವಿಷಯವಾಗಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಪದೇ ಪದೇ ವರದಿಯಾಗುತ್ತಿರುವ ಪ್ರಕರಣಗಳ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಈಗಾಗಲೇ ಪೊಲೀಸ್‍ಗಿರಿಗೆ ಉನ್ನತಮಟ್ಟದ ಸೂಚನೆಯನ್ನು ನೀಡಿದ್ದೇವೆ. ಎಲ್ಲೇ ಆಗಲೀ, ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇರಬಾರದು. ಇಂತಹುದ್ದೆನ್ನೆಲ್ಲಾ ಮಟ್ಟ ಹಾಕಬೇಕೆನ್ನುವುದು ಸರ್ಕಾರದ ನಿಲುವಾಗಿದೆ.
3
+ ಈ ನಿಟ್ಟಿನಲ್ಲಿ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಅದನ್ನು ಪಾಲನೆ ಮಾಡುತ್ತಾರೆ. ಸಂಬಂಧಪಟ್ಟ ಪ್ರಕರಣಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು. ಅಯೋಧ್ಯೆಯಲ್ಲಿನ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ನೀಡಲಾದ ಆಹ್ವಾನವನ್ನು ಕಾಂಗ್ರೆಸ್ ಹೈಕಮಾಂಡ್ ಗೌರವಯುತವಾಗಿ ತಿರಸ್ಕರಿಸಿದೆ.
4
+ ಈ ನಿಲುವಿಗೆ ನಾವೆಲ್ಲಾ ಬದ್ಧರಾಗಿದ್ದೇವೆ. ಪಕ್ಷ ಹೇಳಿದಂತೆ ಕೇಳುವುದು ನಮ್ಮ ಕರ್ತವ್ಯ. ಸಂದರ್ಭ ಬಂದರೆ ವೈಯಕ್ತಿಕವಾಗಿ ನನ್ನ ಅಭಿಪ್ರಾಯವನ್ನು ಹೈಕಮಾಂಡ್‍ಗೆ ತಿಳಿಸುತ್ತೇನೆ. ಸದ್ಯಕ್ಕೆ ಪಕ್ಷ ಹೇಳಿದಂತೆ ಪಾಲನೆ ಮಾಡುತ್ತೇವೆ. ನಾವ್ಯಾರೂ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಹೇಳಿದರು. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಸಂಬಂಧಪಟ್ಟಂತೆ ಇಂದು ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಚರ್ಚೆಯಾಗುವುದಿಲ್ಲ.
5
+ ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ
6
+ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಅನೇಕ ಸ್ನೇಹಿತರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ವಿವಿಧ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಹುದ್ದೆ ದೊರೆತಾಗ ನಾವೂ ಸರ್ಕಾರದಲ್ಲಿ ಭಾಗಿ ಎಂಬ ಅಭಿಪ್ರಾಯ ಅವರಲ್ಲಿ ಬರುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಮತ ಹಾಕುತ್ತಾರೆ ಎಂಬ ನಿಲುವು ಅವರದಾಗಿತ್ತು. ಆದರೆ ಎಐಸಿಸಿ ಅಧ್ಯಕ್ಷರು ಈ ವಿಷಯವಾಗಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಅದನ್ನು ನಾವು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.
7
+ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಚಿವರು ತಮ್ಮ ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಆರಂಭದಲ್ಲೇ ಸೂಚಿಸಲಾಗಿತ್ತು. ಇಂದಿನ ಸಭೆಯಲ್ಲಿ ಮತ್ತಷ್ಟು ಸೂಚನೆಗಳು ದೊರೆಯುವ ಸಾಧ್ಯತೆಯಿದ್ದು, ಯಾವ ಚರ್ಚೆಗಳು ನಡೆಯುತ್ತವೆ. ಸಚಿವರ ಸ್ಪರ್ಧೆಗೆ ಸೂಚನೆ ನೀಡುತ್ತಾರೆಯೇ ಎಂಬೆಲ್ಲಾ ವಿಷಯಗಳ ಬಗ್ಗೆ ಸದ್ಯಕ್ಕೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.
eesanje/url_46_265_4.txt ADDED
@@ -0,0 +1,7 @@
 
 
 
 
 
 
 
 
1
+ ರಾಮ, ಶಿವ ಎಲ್ಲರ ದೇವರು, ಇದರಲ್ಲಿ ಅನಗತ್ಯ ರಾಜಕೀಯ ಬೇಡ : ಸಚಿವ ಎಂ.ಬಿ.ಪಾಟೀಲ್
2
+ ಬೆಂಗಳೂರು,ಜ.11- ಅಯೋಧ್ಯೆಯಲ್ಲಿ ನಡೆಯುವ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಅಳೆದೂ ತೂಗಿ ತೆಗೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
3
+ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಿರ್ಧಾರದಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಲಾಭವಾಗಲಿದೆಯೇ, ನಷ್ಟವಾಗಲಿದೆಯೇ ಎಂಬುದನ್ನು ನಾವು ಲೆಕ್ಕಾಚಾರ ಹಾಕುವುದಿಲ್ಲ. ರಾಮ, ಶಿವ ಎಲ್ಲರ ದೇವರು. ಇದರಲ್ಲಿ ರಾಜಕೀಯ ಅನಗತ್ಯ ಎಂದರು.
4
+ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ನೀಡಿದ ಆಹ್ವಾನದಲ್ಲಿ ನಾಟಕೀಯತೆ ಇತ್ತು. ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅತ್ಯಂತ ಹಿರಿಯ ನಾಯಕರು. 50 ವರ್ಷಗಳ ಅನುಭವ ಇರುವವರು. ಅವರಿಗೆ ಕಾಟಾಚಾರಕ್ಕೆ ಆಹ್ವಾನ ನೀಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿಯವರಿಗೆ ಆಹ್ವಾನ ನೀಡುವ ವಿಷಯದಲ್ಲೂ ನೆಪಮಾತ್ರ ಎಂಬಂತೆ ನಡೆದುಕೊಳ್ಳಲಾಗಿದೆ. ಎಲ್ಲರಿಗೂ ಗೌರವ ಕೊಟ್ಟು, ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ಮಾಡಿದ್ದರೆ ಅದರ ಘನತೆ ಹೆಚ್ಚಾಗುತ್ತಿತ್ತು ಎಂದು ಹೇಳಿದರು.
5
+ ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ
6
+ ಬಿಜೆಪಿ ರಾಮಮಂದಿರ ವಿಷಯದಲ್ಲಿ ರಾಜಕೀಯ ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆ ಗೆಲ್ಲುವ ಹುನ್ನಾರ ನಡೆಸಿದೆ. ಕಳೆದ ಚುನಾವಣೆಯಲ್ಲಿ ಪುಲ್ವಾಮ ಮತ್ತು ಬಾಲಕೋಟ್‍ನಲ್ಲಿ ನಡೆದ ಭಯೋತ್ಪಾದಕ ದಾಳಿಗಳನ್ನು ಚುನಾವಣೆಗೆ ಬಳಸಿಕೊಂಡಿತ್ತು. ಈ ಬಾರಿ ರಾಮನನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರತಿಯೊಂದೂ ಚುನಾವಣೆಯಲ್ಲೂ ಒಂದೊಂದು ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತದೆ ಎಂದರು.
7
+ ಲೋಕಸಭೆ ಚುನಾವಣೆ ತಯಾರಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿಂದು ಸಭೆ ನಡೆಯಲಿದೆ. ಅದರಲ್ಲಿ ವೀಕ್ಷಕರಾಗಿರುವ ಎಲ್ಲಾ ಸಚಿವರೂ ಭಾಗವಹಿಸುತ್ತಿದ್ದೇವೆ. 20 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿ ಎಂದು ಹೇಳಿದರು.
eesanje/url_46_265_5.txt ADDED
@@ -0,0 +1,6 @@
 
 
 
 
 
 
 
1
+ ನಾವು ಶ್ರೀರಾಮನ ವಿರುದ್ಧವಾಗಿಲ್ಲ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಜ.11- ನಾವು ಶ್ರೀರಾಮನ ವಿರುದ್ಧವಾಗಿಲ್ಲ. ಆದರೆ ಅದರಲ್ಲಿ ರಾಜಕೀಯ ಮಾಡುವುದನ್ನು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದಲ್ಲಿನ ಆವರಣದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
3
+ ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂಬ ಕಾಂಗ್ರೆಸ್‍ನ ನಿಲುವೇ ನಮ್ಮ ನಿಲುವಾಗಿದೆ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ಖಂಡಿಸುತ್ತೇವೆ ಎಂದರು. ನಾವೂ ಕೂಡ ಶ್ರೀ ರಾಮಚಂದ್ರನ ಭಕ್ತರು. ಪೂಜೆ ಮಾಡುತ್ತೇವೆ, ಭಜನೆ ಮಾಡುತ್ತೇವೆ, ರಾಮಮಂದಿರ ಕಟ್ಟುತ್ತೇವೆ, ರಾಮನಿಗೆ ವಿರೋಧವಿಲ್ಲ. ಅದೇ ರೀತಿ ರಾಜಕೀಯವಾಗಿ ಮಾತನಾಡುವವರಿಗೆ ಮದ್ದಿಲ್ಲ ಎಂದು ಹೇಳಿದರು.
4
+ ಇಂದು ಲಾಲ್‍ಬಹದ್ದೂರ್ ಶಾಸ್ತ್ರಿ ಅವರ 58ನೇ ಪುಣ್ಯಸ್ಮರಣೆ
5
+ ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಿದ್ದಾರೆ. ಇಲ್ಲಿ ಶ್ರೀ ರಾಮಮಂದಿರವಿದೆ. ಇಲ್ಲೇ ಪೂಜೆ ಮಾಡಿದರೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ಜನವರಿ 22 ರಂದು ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಪೂಜೆ ಮಾಡಲು ಮುಜರಾಯಿ ಇಲಾಖೆ ನಿರ್ಧಾರ ತೆಗೆದುಕೊಂಡಿದೆ. ಅದು ನನ್ನ ಹೇಳಿಕೆಯಲ್ಲ ಎಂದು ಸ್ಪಷ್ಟಪಡಿಸಿದರು.
6
+ ಲಾಲ್ ಬಹದ್ದೂರ್ ಶಾಸ್ತ್ರಿ ದೇಶ ಕಂಡ ಪ್ರಾಮಾಣಿಕ ಪ್ರಧಾನಿ. ಆಹಾರದ ಕೊರತೆಯಾದಾಗ ಒಂದು ದಿನ ಉಪವಾಸ ಮಾಡುವಂತೆ ಕರೆ ನೀಡಿದರು. ಜೈ ಜವಾನ್, ಜೈ ಕಿಸಾನ್ ಘೋಷಣೆ ಬಳಸಿದರು. ರೈಲ್ವೆ ಅಪಘಾತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮಾದರಿಯಾಗಿದ್ದ ಅವರು, ಸ್ವಲ್ಪ ಕಾಲ ಪ್ರಧಾನಿಯಾಗಿದ್ದರೂ ಕೂಡ ಆಹಾರ ಸ್ವಾವಲಂಬನೆಗೆ ಮುನ್ನುಡಿ ಬರೆದರು. ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿದರು ಎಂದು ಹೇಳಿದರು.
eesanje/url_46_265_6.txt ADDED
@@ -0,0 +1,6 @@
 
 
 
 
 
 
 
1
+ 28 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ : ಸಚಿವ ಮುನಿಯಪ್ಪ
2
+ ಬೆಂಗಳೂರು,ಜ.11- ರಾಜ್ಯಸರ್ಕಾರ ಉತ್ತಮ ಯೋಜನೆಗಳ ಆಧಾರವಾಗಿ ಲೋಕಸಭೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
3
+ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಖಾತ್ರಿಗಳೂ ಸೇರಿದಂತೆ ಜನರ ಜೀವನ ಮಟ್ಟ ಸುಧಾರಣೆಗೆ ಕಾಂಗ್ರೆಸ್ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದು ಜನರ ಒಲವು ಗಳಿಸಲು ಯಶಸ್ವಿಯಾಗಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ನಾವು ಚುನಾವಣೆ ನಡೆಸುತ್ತೇವೆ ಎಂದರು.
4
+ ನಿರುದ್ಯೋಗ ನಿವಾರಿಸುವಲ್ಲಿ ಮೋದಿ ವಿಫಲರಾಗಿದ್ದಾರೆ : ಜೈರಾಮ್
5
+ ಪಕ್ಷ ಸಂಘಟನೆಗೆ ನೆರವಾಗುವ ನಿಟ್ಟಿನಲ್ಲಿ ಪಂಚಖಾತ್ರಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಮೂಲಕ ಸುಮಾರು 3 ಸಾವಿರ ಕಾರ್ಯಕರ್ತರನ್ನು ಒಳಗೊಳ್ಳಲಾಗುವುದು. ಶಾಸಕರ ಮಾದರಿಯಲ್ಲೇ ಕಾರ್ಯಕರ್ತರಿಗೂ ಅವಕಾಶಗಳು ದೊರೆಯಲಿವೆ ಎಂದು ಹೇಳಿದರು.
6
+ ಎಲ್ಲರಿಗೂ ಸಮಾನ ಅವಕಾಶಗಳು ದೊರೆಯುವಂತೆ ಒಟ್ಟಾಗಿ ಕೆಲಸ ಮಾಡಲು, ಚುನಾವಣೆ ಗೆಲ್ಲಲು ಸಹಾಯವಾಗಲಿದೆ ಎಂದರು. ಲೋಕಸಭೆ ಚುನಾವಣೆಯ ಪೂರ್ವ ತಯಾರಿ ಸಂಬಂಧಪಟ್ಟಂತೆ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ತಾವು ಭಾಗವಹಿಸುತ್ತಿರುವುದಾಗಿ ತಿಳಿಸಿದರು.
eesanje/url_46_265_7.txt ADDED
@@ -0,0 +1,6 @@
 
 
 
 
 
 
 
1
+ ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ
2
+ ಬೆಂಗಳೂರು,ಜ.11- ರಾಮಲಲ್ಲಾ ಟ್ರಸ್ಟ್ ಆಹ್ವಾನ ಕೊಟ್ಟಿದ್ದರೂ ಅದನ್ನು ತಿರಸ್ಕರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಇದೇ 22 ರಂದು ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವಂತೆ ಖುದ್ದು ಟ್ರಸ್ಟ್‍ನವರೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾಗಾಂಧಿಯವರಿಗೆ ಆಹ್ವಾನ ಪತ್ರ ನೀಡಿದ್ದರು.
3
+ ಆದರೆ ಕುಂಟು ನೆಪ ಹೇಳಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವುದು ಹಿಂದೂಗಳಿಗೆ ಮಾಡಿದ ಅಪಮಾನ. ಲೋಕಸಭೆ ಚುನಾವಣೆಯಲ್ಲಿ ಜನತೆಯೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
4
+ ಆಯೋಧ್ಯೆ ಪ್ರವಾಸಕ್ಕೆ ವಾರ್ಷಿಕ ಉಚಿತ ರೈಲು ಪ್ರಯಾಣ ಯೋಜನೆ
5
+ ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದರು. ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ, ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು.
6
+ ಕಾಂಗ್ರೆಸ್ಸಿಗರು ಯಾವ ಕಾರಣಕ್ಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಂಥವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದು ನುಡಿದರು.
eesanje/url_46_265_8.txt ADDED
@@ -0,0 +1,9 @@
 
 
 
 
 
 
 
 
 
 
1
+ ತಾಯಿಯಿಂದಲೇ ಹತ್ಯೆಯಾಗಿದ್ದ ಬಾಲಕನ ಅಂತ್ಯಕ್ರಿಯೆ
2
+ ಬೆಂಗಳೂರು, ಜ. 10- ಗೋವಾ ಹೋಟೆಲ್ನಲ್ಲಿ ತಾಯಿಯಿಂದಲೇ ಹತ್ಯೆಯಾಗಿದ್ದ 4 ವರ್ಷದ ಮಗುವಿನ ಮೃತದೇಹವನ್ನು ಚಿತ್ರದುರ್ಗದಿಂದ ನಗರಕ್ಕೆ ತರಲಾಗಿದ್ದು, ಶ್ರೀರಾಂಪುರದ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ. ಇಂಡೋನೇಷ್ಯಾದಲ್ಲಿ ನೆಲೆಸಿರುವ ಕೇರಳ ಮೂಲದ ವೆಂಕಟರಾಮನ್ ಅವರು ತಡರಾತ್ರಿ ಚಿತ್ರದುರ್ಗದ ಹಿರಿಯೂರಿಗೆ ಆಗಮಿಸಿ ಮರಣೋತ್ತರ ಪರೀಕ್ಷೆಯ ನಂತರ ಮಗನ ಮೃತದೇಹವನ್ನು ಪಡೆದುಕೊಂಡು ನಗರಕ್ಕೆ ವಾಪಸ್ಸಾಗಿದ್ದರು.
3
+ ಮಹಿಳಾ ಉದ್ಯಮಿ ಸುಚನಾ ಸೇಠ್ ವಾಸವಾಗಿದ್ದ ಸುಬ್ರಹ್ಮಣ್ಯನಗರದ ಬ್ರಿಗೇಡ್ಗೇಟ್ ಅಪಾರ್ಟ್ಮೆಂಟ್ಗೆ ತಂದಿದ್ದು, ಅಲ್ಲಿ ಪ್ರಾಥಮಿಕ ವಿವಿಧಾನಗಳು ನಡೆದ ನಂತರ ಹರಿಶ್ಚಂದ್ರಘಾಟ್ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್ಅಪ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಚನಾ ಸೇಠ್ ಅವರು ಸೋಮವಾರ ರಾತ್ರಿ ಗೋವಾದ ಸರ್ವೀಸ್ ಅಪಾರ್ಟ್ಮೆಂಟ್ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಮೃತದೇಹವನ್ನು ಸೂಟ್ಕೇಸ್ನಲ್ಲಿ ಹಾಕಿಕೊಂಡು ಟ್ಯಾಕ್ಸಿಯಲ್ಲಿ ಬೆಂಗಳೂರಿಗೆ ಬರುತ್ತಿದ್ದರು.
4
+ ಮಾರ್ಗಮಧ್ಯೆ ಚಿತ್ರದುರ್ಗದ ಐಮಂಗಲ ಠಾಣೆ ಪೊಲೀಸರು ಮಹಿಳಾ ಉದ್ಯಮಿಯನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಸೂಟ್ಕೇಸ್ನಲ್ಲಿ ಅವರ ಮಗನ ಮೃತದೇಹ ಪತ್ತೆಯಾಗಿತ್ತು. ನಂತರ ಗೋವಾ ಪೊಲೀಸರಿಗೆ ಮಹಿಳೆಯನ್ನು ಹಸ್ತಾಂತರಿಸಿದ್ದಾರೆ. ಮಗುವಿನ ದೇಹದ ಮೇಲೆ ಯಾವುದೇ ರಕ್ತ ಸೋರಿಕೆಯಾಗಲೀ ಅಥವಾ ಹೋರಾಟ ನಡೆಸಿರುವ ಗುರುತುಗಳಿರಲಿಲ್ಲ ಎಂದು ಚಿತ್ರದುರ್ಗದ ವೈದ್ಯ ಡಾ. ನಾಯಕ್ ಮಾಹಿತಿ ನೀಡಿದ್ದಾರೆ.
5
+ ವಿಧಾನಸೌಧದ ಮುಂದೆ ದಂಪತಿ ಹೈಡ್ರಾಮ
6
+ ಸೇಠ್ ಅವರು ದಿ ಮೈಂಡ್ಫುಲ್ ಎಐ ಲ್ಯಾಬïನ ಸಿಇಒ ಆಗಿದ್ದಾರೆ ಮತ್ತು ಅವರ ಲಿಂಕ್ಡ್ಇನ್ ಪೊ್ರಫೈಲ್ನ ಪ್ರಕಾರ, ಅವರು ಎಐ ನೀತಿಶಾಸ್ತ್ರ ತಜ್ಞ ಮತ್ತು ಡೇಟಾ ವಿಜ್ಞಾನಿಯಾಗಿದ್ದು, ಡೇಟಾ ಸೈನ್ಸ್ ತಂಡಗಳಿಗೆ ಮಾರ್ಗದರ್ಶನ ನೀಡುವಲ್ಲಿ ಮತ್ತು ಸ್ಟಾರ್ಟ್ಅಪ್ಗಳು ಮತ್ತು ಉದ್ಯಮ ಸಂಶೋಧನೆಗಳಲ್ಲಿ ಯಂತ್ರ ಕಲಿಕೆಯ ಪರಿಹಾರಗಳನ್ನು ಸ್ಕೇಲಿಂಗ್ ಮಾಡುವಲ್ಲಿ 12 ವರ್ಷಗಳ ಅನುಭವವನ್ನು ಹೊಂದಿದ್ದಾರೆ.
7
+ ಅವರು ಕೃತಕ ಬುದ್ಧಿಮತ್ತೆ ಎಥಿಕ್ಸ್ ಪಟ್ಟಿಯಲ್ಲಿ 100 ಬ್ರಿಲಿಯಂಟ್ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ. ಅವರು ಡೇಟಾ ಸೊಸೈಟಿಯಲ್ಲಿ ಮೊಜಿಲ್ಲಾ ಫೆಲೋ ಆಗಿದ್ದಾರೆ, ಹಾರ್ವರ್ಡ್ ವಿಶ್ವವಿದ್ಯಾಲಯದ ಬರ್ಕ್ಮನ್ ಕ್ಲೈನ್ ಸೆಂಟರ್ನಲ್ಲಿ ಫೆಲೋ ಆಗಿದ್ದಾರೆ ಮತ್ತು ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ನಲ್ಲಿ ಸಂಶೋಧನಾ ಸಹವರ್ತಿಯಾಗಿದ್ದಾರೆ. ಅವರು ಸಹಜ ಭಾಷಾ ಸಂಸ್ಕರಣೆಯಲ್ಲಿ ಪೇಟೆಂಟ್ಗಳನ್ನು ಹೊಂದಿದ್ದಾರೆ ಎಂದು ಅವರ ಪೊ್ರಫೈಲ್ ತಿಳಿಸಿದೆ. ಸೇಠ್ ಅವರು ಎಐ ಎಥಿಕ್ಸ್ ಅಡ್ವೈಸರಿ ಆಡಿಟ್ಸ್ ಮತ್ತು ಜವಾಬ್���ಾರಿಯುತ ಎಐ ಸ್ಟ್ರಾಟಜಿಯಲ್ಲಿ ಪರಿಣತರಾಗಿದ್ದಾರೆ.
8
+
9
+ ಕೋಲ್ಕತ್ತಾ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವೀಧರರು ಮತ್ತು ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ನಿಂದ ಸಂಶೋಧನಾ ಸಹೋದ್ಯೋಗಿ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಇಂಟರ್ನೆಟ್ ಮತ್ತು ಸೊಸೈಟಿಗಾಗಿ ಬರ್ಕ್ಮನ್ ಕ್ಲೈನ್ ಸೆಂಟರ್ನಲ್ಲಿ ಎರಡು ವರ್ಷಗಳನ್ನು ಕಳೆದಿದ್ದರು ಎಂದು ತಿಳಿದುಬಂದಿದೆ. ಒಟ್ಟಾರೆ ಈ ಪ್ರಕರಣದಲ್ಲಿ ಪತಿ ಮೇಲಿನ ಕೋಪಕ್ಕೆ ತನ್ನ ಮುದ್ದಾದ ಮಗುವನ್ನು ಕೊಲೆ ಮಾಡಿರುವುದು ಎಷ್ಟು ಸರಿ ಎಂಬುವುದು ನಾಗರಿಕರ ಪ್ರಶ್ನೆಯಾಗಿದೆ.
eesanje/url_46_265_9.txt ADDED
@@ -0,0 +1,5 @@
 
 
 
 
 
 
1
+ ವಿಧಾನಸೌಧದ ಮುಂದೆ ದಂಪತಿ ಹೈಡ್ರಾಮ
2
+ ಬೆಂಗಳೂರು,ಜ.10- ಇಂದು ಬೆಳಿಗ್ಗೆ ವಿಧಾನಸೌಧ ಮುಂದೆ ಬಂದ ದಂಪತಿ ಸೀಮೆ ಎಣ್ಣೆ ಸುರಿದುಕೊಂಡು ಹೈಡ್ರಾಮಾ ಮಾಡಿದ್ದಾರೆ. ಜೆಜೆ ನಗರದ ಪಾದರಾಯನಪುರ ನಿವಾಸಿಗಳಾದ ಶಾಯಿಸ್ತಾಬಾಬು ಹಾಗೂ ಮೊಹಮದ್ ಮುನಾಯಿತ್ ದಂಪತಿಯನ್ನು ವಿಧಾನಸೌಧ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
3
+ ಈ ದಂಪತಿ ಚನ್ನಪಟ್ಟಣದಲ್ಲಿರುವ ತಮ್ಮ ಜಮೀನಿನಲ್ಲಿ ಶುಂಠಿ ಬೆಳೆಯಲು ಬ್ಯಾಂಕ್ನಿಂದ ಲೋನ್ ಪಡೆದಿದ್ದು, ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್ನವರು ಇವರ ಮನೆ ಹರಾಜು ಮಾಡಿದ್ದಾರೆ. ಅಲ್ಲದೆ ಸ್ಥಳೀಯರು ಸಹ ತಮಗೆ ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಲು ವಿಧಾನಸೌಧ ಬಳಿ ಬಂದಿದ್ದರು.
4
+ ಕರ್ನಾಟಕ ಪೊಲೀಸ್ ಇಲಾಖೆಗೆ ಸರ್ಜರಿ ಅಗತ್ಯವಿದೆ : ಶಿವರಾಜ್‍ಕುಮಾರ್
5
+ ಸಿಎಂ ಭೇಟಿಗೂ ಮುನ್ನ ಸೀಮೆ ಎಣ್ಣೆ ಕ್ಯಾನ್ ಸಮೇತ ವಿಧಾನಸೌಧ ಮುಂದೆ ಬಂದ ದಂಪತಿ ಏಕಾಏಕಿ ಸೀಮೆಎಣ್ಣೆ ಸುರಿದುಕೊಂಡಿದ್ದಾರೆ.ತಕ್ಷಣ ಗಮನಿಸಿದ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಅವರು ಸೀಮೆ ಎಣ್ಣೆ ಕ್ಯಾನ್ ಕಿತ್ತುಕೊಂಡು, ದಂಪತಿಯನ್ನು ವಶಕ್ಕೆ ಪಡೆದಿದ್ದಾರೆ.ದಂಪತಿಯನ್ನು ರಕ್ಷಿಸುವ ವೇಳೆ ಇನ್ಸ್ಪೆಕ್ಟರ್ ಅವರ ಮೈಮೇಲೂ ಸೀಮೆಎಣ್ಣೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
eesanje/url_46_266_1.txt ADDED
@@ -0,0 +1,8 @@
 
 
 
 
 
 
 
 
 
1
+ ಕನ್ನಡ ಹೋರಾಟಗಾರರನ್ನು ಜೈಲಿಗಟ್ಟುವ ಕಾಂಗ್ರೆಸ್ ಟ್ಯಾಬ್ಲೊ ವಿಷಯದಲ್ಲಿ ಮೊಸಳೆ ಕಣ್ಣೀರಿಡುತ್ತಿದೆ : ವಿಜಯೇಂದ್ರ
2
+ ಬೆಂಗಳೂರು,ಜ.10- ಕನ್ನಡ ನಾಮಫಲಕ ಅಳವಡಿಸುವಂತೆ ಹೋರಾಟ ನಡೆಸುವ ಕನ್ನಡಿಗರನ್ನು ಜೈಲಿಗೆ ಅಟ್ಟುವ ಕಾಂಗ್ರೆಸ್ ಸರ್ಕಾರ ಟ್ಯಾಬ್ಲೊ ವಿಷಯದಲ್ಲಿ ಮೊಸಳೆ ಕಣ್ಣೀರು ಸುರಿಸುವ ನಾಟಕವಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸ್ವತಃ ಸಚಿವರೇ ಹೇಳಿದರೂ ಅವರ ಮೇಲೆ ಏಕೆ ಕ್ರಮ ಜರುಗಿಸಿಲ್ಲ. ನಿಜವಾದ ಕನ್ನಡದ ಬದ್ಧತೆಯಿದ್ದರೆ ಅದನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
4
+ ಕನ್ನಡ ಹೋರಾಟಗಾರರು ನಾಮಫಲಕ ಅಳವಡಿಸಲು ಹೋರಾಟ ನಡೆಸಿದರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸಿ ಜೈಲಿಗೆ ಹಾಕುತ್ತೀರಿ. ಜಾಮೀನು ನೀಡಿದ ಮರುಕ್ಷಣವೇ ಮತ್ತೆ ಬಂಸುತ್ತೀರಿ ಅಂದರೆ ಕನ್ನಡ ಭಾಷೆ ಹಾಗೂ ಹೋರಾಟಗಾರರ ಬಗ್ಗೆ ನಿಮಿಗಿರುವ ಕಾಳಜಿ ಇದೇನಾ ಎಂದು ಪ್ರಶ್ನೆ ಮಾಡಿದರು.
5
+ ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದನ್ನು ಹಲವಾರು ಬಾರಿ ಹೇಳಿದ್ದರೂ ಸಚಿವರು ಮತ್ತೆ ಗಡಿ ವಿವಾದವನ್ನು ಕೆದಕಿದ್ದಾರೆ. ಇದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ. ತಕ್ಷಣವೇ ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.
6
+ ಶೀಘ್ರದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
7
+ ದೆಹಲಿಯ ಕರ್ತವ್ಯಪಥದಲ್ಲಿ ಇದೇ 26ರಂದು ಗಣರಾಜ್ಯೋತ್ಸವದ ವೇಳೆ ಕರ್ನಾಟಕದ ಸ್ತಬ್ಧಚಿತ್ರ ಪಾಲ್ಗೊಳ್ಳುವಿಕೆಗೆ ಅವಕಾಶ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಜಯೇಂದ್ರ ಬಲವಾಗಿ ಸಮರ್ಥಿಸಿಕೊಂಡರು. ಕರ್ನಾಟಕ ಸತತವಾಗಿ 14 ವರ್ಷಗಳಿಂದ ಸ್ತಬ್ದ ಚಿತ್ರಗಳ ಪ್ರದರ್ಶನದಲ್ಲಿ ಪಾಲ್ಗೊಂಡಿದೆ. ಬೇರೆ ರಾಜ್ಯಗಳಿಗೂ ಅವಕಾಶ ಕಲ್ಪಿಸಬೇಕೆಂಬ ಕಾರಣಕ್ಕಾಗಿ ಅವಕಾಶ ನೀಡಿಲ್ಲ. ಇದರಲ್ಲಿ ರಾಜಕಾರಣ ಬೆರೆಸುವ ಅಗತ್ಯವಿಲ್ಲ ಎಂದು ಮನವಿ ಮಾಡಿದರು.
8
+ ಕಳೆದ ಬಾರಿ ಭಾಗಿಯಾಗಿದ್ದ ಗೋವಾ, ತಮಿಳುನಾಡು, ಉತ್ತರಖಂಡ್ ಸೇರಿದಂತೆ ಹಲವು ರಾಜ್ಯಗಳಿಗೆ ಅವಕಾಶ ಕಲ್ಪಿಸಿಲ್ಲ. ಹೋದ ವರ್ಷವು ಸ್ತಬ್ದಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರಲಿಲ್ಲ. ಕೊನೆಗೆ ಹಿರಿಯರ ಮಧ್ಯಪ್ರವೇಶದಿಂದ ಅವಕಾಶ ನೀಡಲಾಗಿತ್ತು. ಈಗ ಸಮಯ ಮುಗಿದಿರುವುದರಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದರು.
eesanje/url_46_266_10.txt ADDED
@@ -0,0 +1,7 @@
 
 
 
 
 
 
 
 
1
+ ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸ್ ವಶಕ್ಕೆ
2
+ ಬೆಂಗಳೂರು,ಜ.9- ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕೆಲವು ಮಾಲ್‍ಗಳು, ಅಂಗಡಿಗಳ ನಾಮಫಲಕ ಧ್ವಂಸಗೊಳಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂಬ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಾಣಗೌಡ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
3
+ 2017 ರ ಹಳೆ ಪ್ರಕರಣ ಸಂಬಂಧ ಮತ್ತೆ ವಶಕ್ಕೆ ಪಡೆದಿರುವ ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. 2017 ರಲ್ಲಿ ಕರವೇ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮೆಟ್ರೋ ನಾಮಫಲಕಕ್ಕೆ ಮಸಿ ಬಳಿದ ಹಿನ್ನೆಲೆಯಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ವಿರುದ್ಧ ದೂರು ದಾಖಲಾಗಿತ್ತು.
4
+ ಈ ಸಂಬಂಧ ಜಾಮೀನುರಹಿತ ವಾರೆಂಟ್ ಸಹ ಜಾರಿ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ನಾರಾಯಣಗೌಡ ಅವರನ್ನು ಕುಮಾರಸ್ವಾಮಿ ಲೇ ಔಟ್ ಠಾಣೆ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಕನ್ನಡ ಭಾಷೆಯಲ್ಲಿ ಕಡ್ಡಾಯ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಇತ್ತೀಚೆಗೆ ಕರವೇ ಕಾರ್ಯಕರ್ತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾದರಹಳ್ಳಿ ಗೇಟ್ ಬಳಿ ಪ್ರತಿಭಟನೆ ನಡೆಸಿದ ಕರವೇ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಮಾಲ್‍ಗಳು ಹಾಗೂ ಅಂಗಡಿಗಳ ನಾಮಫಲಕಗಳನ್ನು ಧ್ವಂಸಗೊಳಿಸಿ ಸಾರ್ವಜನಿಕರ ಆಸ್ತಿಪಾಸ್ತಿ ಹಾಳು ಮಾಡಿದ್ದರು.
5
+ ಡಿಸಿಎಂ ರೇಸ್ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೆಸರು ಮುನ್ನಲೆಗೆ
6
+ ಆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಕರವೇ ಅಧ್ಯಕ್ಷ ನಾರಾಯಣಗೌಡರು ಹಾಗೂ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು. ಶನಿವಾರವೇ ಇವರ ಬಿಡುಗಡೆಯಾಗಬೇಕಿತ್ತು. ಆದರೆ ಪ್ರಕ್ರಿಯೆ ತಡವಾದ ಕಾರಣ ಇಂದು ಬೆಳಗ್ಗೆ ನಾರಾಯಣಗೌಡರು ಹಾಗೂ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಯಿತು.
7
+ ಕಾರ್ಯಕರ್ತರನ್ನು ಬಿಎಂಟಿಸಿ ಬಸ್‍ನಲ್ಲಿ ಕಳುಹಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಕರಣವೊಂದರ ಸಂಬಂಧ ಕೆ.ಎಸ್.ಲೇಔಟ್ ಠಾಣೆ ಪೊಲೀಸರು ಮತ್ತೆ ನಾರಾಯಣಗೌಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
eesanje/url_46_266_11.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಡಿಸಿಎಂ ಚರ್ಚೆ : ಹೈಕಮಾಂಡ್‌ಗೆ ಖಡಕ್ ಸಂದೇಶ ರವಾನಿಸಿದ ಡಿಕೆಶಿ
2
+ ಬೆಂಗಳೂರು,ಜ.9- ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿದ್ದೇ ಆದರೆ ತಾವು ಸಂಪುಟದಿಂದ ಹೊರಗಿರುವುದಾಗಿ ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
3
+ ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಒತ್ತಡ ತೀವ್ರವಾದ ಬೆನ್ನಲ್ಲೇ 7 ಮಂದಿ ಸಚಿವರುಗಳು ರಹಸ್ಯ ಸಭೆ ನಡೆಸಿದ್ದರು. ಪ್ರತ್ಯೇಕ ಭೋಜನಾಕೂಟಗಳು ನಡೆದಿದ್ದವು. ಅಭಿಪ್ರಾಯ ಸಂಗ್ರಹಕ್ಕಾಗಿ ದೆಹಲಿಯಿಂದ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಬಳಿಯೂ ಆಕಾಂಕ್ಷಿಗಳು ತಮ್ಮ ಬೇಡಿಕೆಯನ್ನು ಮಂಡಿಸಿದ್ದರು. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸದೇ ಇದ್ದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂಬ ಸಂದೇಶವನ್ನು ರವಾನಿಸಿದ್ದರು.
4
+ ಅದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಹೈಕಮಾಂಡ್‍ಗೆ ತಮ್ಮ ನಿಲುವನ್ನು ತಿಳಿಸಿದ್ದು, ಪಕ್ಷಕ್ಕೆ ಅನುಕೂಲವಾಗುವುದಾದರೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಸಿದ್ದೇ ಆದರೆ ತಾವು ಪ್ರಸ್ತುತ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ. ಹೈಕಮಾಂಡ್ ಬಯಸುವುದಾದರೆ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತೇನೆ. ಬೇಡ ಎಂದರೆ ಅದನ್ನೂ ತ್ಯಜಿಸಲು ಸಿದ್ಧ ಎಂದು ಖಡಕ್ ಸಂದೇಶ ನೀಡಿದ್ದಾರೆ. ಇದು ಹೈಕಮಾಂಡ್‍ಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.
5
+ ಒಂದೆಡೆ ಜಾತಿವಾರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಸೂಕ್ಷ್ಮ ವಿಚಾರವನ್ನು ತೇಲಿಬಿಟ್ಟು ಹಿರಿಯ ಕಾಂಗ್ರೆಸಿಗರು ಮುಜುಗರ ಉಂಟುಮಾಡಿದ್ದಾರೆ. ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣದ ಸಚಿವರೇ ಈ ತಂತ್ರಗಾರಿಕೆಯ ಹಿಂದೆ ಇರುವುದು ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಡಿ.ಕೆ.ಶಿವಕುಮಾರ್‍ರ ಪ್ರಭಾವವನ್ನು ತಗ್ಗಿಸುವುದು ಮತ್ತು ಲೋಕಸಭೆ ಚುನಾವಣೆಯ ಬಳಿಕ ಅಧಿಕಾರ ಹಂಚಿಕೆಯ ಬೇಡಿಕೆಗಳು ಮುನ್ನೆಲೆಗೆ ಬರದಂತೆ ನೋಡಿಕೊಳ್ಳಲು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಬೇಡಿಕೆಯನ್ನು ಪ್ರಸ್ತಾಪಿಸಲಾಗಿದೆ ಎಂಬ ಚರ್ಚೆಗಳಿವೆ.
6
+ ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್
7
+ ಅದಕ್ಕೆ ಪೂರಕವೆಂಬಂತೆ ಹೆಚ್ಚುವರಿ ಉಪಮುಖ್ಯಮಂತ್ರಿಗಳ ವಿಚಾರವಾಗಿ ಪರ-ವಿರೋಧ ವಾಕ್ಸಮರಗಳು ಪಕ್ಷದಲ್ಲಿ ಸಣ್ಣ ಧ್ವನಿಯಾಗಿ ಕೇಳಿ ಬರುತ್ತಲೇ ಇವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಗೊಂದಲಗಳನ್ನು ತಡೆಹಿಡಿಯಲು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಬೆಂಗಳೂರಿಗೆ ಕಳುಹಿಸಿದೆ. ಅವರು ನಿನ್ನೆ ಸಂಪುಟದ ಪ್ರಮುಖರ ಜೊತೆ ಚರ್ಚೆ ನಡೆಸಿದ್ದಾರೆ. ಅದರಲ್ಲಿ ಹೆಚ್ಚುವರಿ ಹುದ್ದೆಯ ಆಕಾಂಕ್ಷಿಗಳೊಂದಿಗೂ ಸಮಾಲೋಚನೆ ನಡೆಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಸೂಕ್ಷ್ಮ ವಿಚಾರಗಳು ಗೊಂದಲ ಸೃಷ್ಟಿಸಿದ್ದು ಹೈಕಮಾಂಡ್‍ಗೆ ಇಕ್ಕಟ್ಟಿಗೆ ಸಿಲುಕಿಸಿದಂತೆ ಮಾಡಿದೆ.
8
+ ಜಾತಿವಾರು ಅವಕಾಶ ನೀಡದೇ ಇದ್ದರೆ ಪಕ್ಷದ ಸಾಂಪ್ರದಾಯಿಕ ಮತ ಬ್ಯಾಂಕ್‍ಗಳು ಛಿದ್ರಗೊಳ್ಳುವ ಆತಂಕ ಒಂದು ಕಡೆಯಾಗಿದೆ. ಮತ್ತೊಂದು ಕಡೆ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆಯನ್ನು ಸೃಷ್ಟಿಸಿದರೆ ಡಿ.ಕೆ.ಶಿವಕುಮಾರ್ ಅವರ ಪ್ರಭಾವ ತಗ್ಗಲಿದೆ. ಸಹಜವಾಗಿ ಅವರ ಬೆಂಬಲಕ್ಕಿರುವ ದೊಡ್ಡ ಸಂಘಟನಾ ಪಡೆ ತಟಸ್ಥವಾಗಿ ಉಳಿಯುವ ಅಪಾಯವಿದೆ. ಲೋಕಸಭೆ ಚುನಾವಣೆಯ ಗೆಲುವಿನ ಶ್ರೇಯಸ್ಸು ಯಾರಿಗೆ ಎಂಬ ಚರ್ಚೆಗಳು ಮತ್ತು ಆಂತರಿಕ ಪೈಪೋಟಿ ಈಗಾಗಲೇ ಶುರುವಾಗಿದೆ.
9
+ ಸಾತ್ವಿಕ್-ಚಿರಾಗ್ ಜೋಡಿಗೆ ಲಭಿಸಿದ ಖೇಲ್‍ರತ್ನ ಪ್ರಶಸ್ತಿ
10
+ ವಿಧಾನಸಭೆ ಚುನಾವಣೆ ಗೆಲುವನ್ನು ಹೈಕಮಾಂಡ್ ಸಿದ್ದರಾಮಯ್ಯ ಅವರ ಹೆಗಲಿಗೆ ಕಟ್ಟಿ ಮುಖ್ಯಮಂತ್ರಿ ಹುದೆ ನೀಡಿದೆ. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಹಜವಾಗಿ ಅದರ ಕ್ರೆಡಿಟ್ ಅನ್ನು ಸಿದ್ದರಾಮಯ್ಯ ಅವರಿಗೇ ದೊರಕಿಸಲು ಪಕ್ಷದಲ್ಲಿ ಒಂದು ಬಣ ಹವಣಿಸುತ್ತಿದೆ. ಆದರೆ ಸಹಜವಾಗಿ ಪಕ್ಷದ ಆಧ್ಯಕ್ಷರ ಸಂಘಟನೆಯ ಚತುರತೆಗೆ ಗೆಲುವಿಗೆ ಕಾರಣ ಎಂಬ ವಾದಗಳಿವೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಈ ವಾದಕ್ಕೆ ಹೆಚ್ಚು ಮನ್ನಣೆ ಸಿಗಲಿಲ್ಲ. ಹೀಗಾಗಿ ನಾನಾ, ನೀನಾ ಎಂಬ ಜಿದ್ದಾಜಿದ್ದಿನ ಪೈ ಪೋಟಿ ಒಳಗೊಳಗೇ ತೀವ್ರವಾಗಿದೆ.
11
+ ಈ ರೀತಿಯ ಅನಾರೋಗ್ಯಕರ ಪೈಪೋಟಿ ಹೆಚ್ಚಾಗಿ ಚುನಾವಣೆ ಮೇಲೆ ಪರಿಣಾಮ ಬೀಳಬಾರದು ಎಂಬ ಕಾರಣಕ್ಕಾಗಿ ಸಮನ್ವಯತೆಯನ್ನು ಸಾಸಲು ಹೈಕಮಾಂಡ್ ಹಲವು ಬಾರಿ ಪ್ರಯತ್ನಿಸಿದೆ. ಸುರ್ಜೆವಾಲ ಅವರ ನಿಯೋಗ ಈ ನಿಟ್ಟಿನಲ್ಲೇ ಗಂಭೀರ ಪ್ರಯತ್ನ ನಡೆಸಿದೆ ಎಂದು ತಿಳಿದುಬಂದಿದೆ.
eesanje/url_46_266_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಡಿಸಿಎಂ ರೇಸ್ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೆಸರು ಮುನ್ನಲೆಗೆ
2
+ ಬೆಂಗಳೂರು, ಡಿ.30- ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಬೇಡಿಕೆ ಹೆಚ್ಚಾದ ಬೆನ್ನಲ್ಲೇ, ಇದೀಗ ವೀರಶೈವ ಲಿಂಗಾಯತ ಕೋಟಾದಲ್ಲಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರ ಹೆಸರು ಮುನ್ನಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಹಾಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ , ಜೀವನೋಪಾಯ ಹಾಗೂ ರಾಯಚೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಶರಣ ಪ್ರಕಾಶ್ ಪಾಟೀಲ್ ವಿವಾದರಹಿತ ರಾಜಕಾರಣಿ ಎಂದೇ ಗುರುತಿಸಿಕೊಂಡವರು.
3
+ ಪಕ್ಷದ ಶಿಸ್ತಿನ ಸಿಪಾಯಿ, ನಿಷ್ಕಳಂಕ ರಾಜಕಾರಣಿ ಎಂದು ಕರೆಯಲ್ಪಡುವ ಡಾ.ಶರಣ್ ಪ್ರಕಾಶ್ ಪಾಟೀಲ್, ಕಲ್ಯಾಣ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿರುವ ಶರಣ ಪ್ರಕಾಶ್ ಪಾಟೀಲ್, ಸಚಿವರಾಗಿ ಹಲವು ಖಾತೆಗಳನ್ನು ನಿಭಾಯಿಸಿದ್ದಾರೆ.
4
+ ರಕ್ಷಣಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾದ ಸಮೀರ್ ಕುಮಾರ್ ನೇಮಕ
5
+ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರದಲ್ಲಿ ಚರ್ಚೆ ನಡೆಯುತ್ತಿರುವ ಹಂತದಲ್ಲಿ ಶರಣ ಪ್ರಕಾಶ್ ಪಾಟೀಲ್ ಅವರನ್ನು ಪರಿಗಣಿಸಬೇಕು ಎಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೂಗೆದ್ದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಿದರೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ಚರ್ಚೆಯೂ ಆರಂಭವಾಗಿದೆ. ಈ ಭಾಗದಲ್ಲಿ ವೀರಶೈವ ಲಿಂಗಾಯತ ಮತಗಳು ಅಭ್ಯರ್ಥಿಗಳ ಸೋಲು – ಗೆಲುವಿನಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವುದರಿಂದ ಇದೇ ಸಮುದಾಯಕ್ಕೆ ಸೇರಿದ ಪ್ರಭಾವಿ ಸಚಿವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
6
+ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಡಲಿವೆ. ಒಟ್ಟು 5 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಭಾಗದಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿತ್ತು. ಇತ್ತೀಚೆಗೆ ಕಳೆದ ಮೇ ತಿಂಗಳಿನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಅಭೂತಪೂರ್ವ ಯಶಸ್ಸು ಕಂಡಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ ಪಕ್ಷ 25 ಕ್ಷೇತ್ರಗಳನ್ನು ಗೆದ್ದು ಎಐಸಿಸಿಗೆ ಭರ್ಜರಿ ಉಡುಗೊರೆ ನೀಡುವ ಲೆಕ್ಕಾಚಾರದಲ್ಲಿ ಕೆಪಿಸಿಸಿಗೆ ಇದೆ. ಇದು ಸಾಧ್ಯವಾಗಬೇಕಾದರೆ ರಾಜ್ಯದಲ್ಲಿ ಅತ್ಯಂತ ಪ್ರಭಾವಿ ಸಮುದಾಯ ಎನಿಸಿದ ವೀರಶೈವ ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡಬೇಕು ಎಂಬ ಮಾತುಗಳು ಸಾರ್ವ���ನಿಕ ವಲಯದಲ್ಲೂ ಕೇಳಿ ಬರುತ್ತಿದೆ.
7
+ ಜ.17ರಂದು ರಾಮ್‍ಲಲ್ಲಾ ವಿಗ್ರಹ ವೀಕ್ಷಣೆಗೆ ಅವಕಾಶ
8
+ ಹಾಗೊಂದು ವೇಳೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡುವುದಾದರೆ ಅದಕ್ಕೆ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರನ್ನು ಪರಿಗಣಿಸಬೇಕು ಎಂಬ ಹಕ್ಕೊತ್ತಾಯಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆಗೂ ಅವಿನಾಭಾವ ಸಂಬಂಧ ಹೊಂದಿರುವ ಶರಣ ಪ್ರಕಾಶ್ ಪಾಟೀಲ್ ವಿಷಯವಾಗಿ ರಾಜಕೀಯ ವಿರೋಧಿಗಳು ಕಡಿಮೆ.
9
+ ಈ ಹಿಂದೆ ವೈದ್ಯಕೀಯ ಶಿಕ್ಷಣ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಕಾರಣಕ್ಕಾಗಿ ಈ ಬಾರಿ ಅತ್ಯಂತ ಮಹತ್ವದ್ದಾದ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯ ಜವಾಬ್ದಾರಿಗಳನ್ನು ಸಿದ್ದರಾಮಯ್ಯನವರು ಶರಣ ಪ್ರಕಾಶ್ ಪಾಟೀಲ್ ಅವರಿಗೆ ವಹಿಸಿದ್ದರು. ಇದೀಗ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಟೊಂಕ ಕಟ್ಟಿ ನಿಂತಿದ್ದಾರೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಯುವನಿಧಿ ಯೋಜನೆ ಅನುಷ್ಠಾನವಾಗಲಿದೆ.
eesanje/url_46_266_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಇಂದಿನಿಂದ ಕೆಸಿಇಟಿ ಪರೀಕ್ಷೆಗೆ ಆನ್‍ಲೈನ್ ಸಲ್ಲಿಕೆಗೆ ಅವಕಾಶ
2
+ ಬೆಂಗಳೂರು,ಜ.10- ವೃತ್ತಿಪರ ಕೋರ್ಸುಗಳಿಗೆ ಸೇರುವ ಅರ್ಹತೆ ಪಡೆಯಲು ಅಭ್ಯರ್ಥಿಗಳು ಕೆಸಿಇಟಿ-24 ಪರೀಕ್ಷೆಗೆ ಇಂದಿನಿಂದಲೇ ಫೆಬ್ರುವರಿ 10 ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಕಾಧಿರವು (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ-24) ನಡೆಸುವ ದಿನಾಂಕವನ್ನು ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಏಪ್ರಿಲ್ 18 ಮತ್ತು 19 ರಂದು ಪರೀಕ್ಷೆಗಳು ನಡೆಯಲಿವೆ. ಈ ಮುಂಚೆ ಏಪ್ರಿಲ್ 20 ಮತ್ತು 21 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು.
3
+ ಈ ಸಂಬಂಧ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್ 21ರಂದು ಎನ್‍ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅದರಂತೆ, ಕೆಸಿಇಟಿ ಕನ್ನಡ ಪರೀಕ್ಷೆ ಏಪ್ರಿಲ್ 20 ರಂದು ನಡೆಯಲಿದೆ.
4
+ ಮೆಡಿಕಲ್ / ಡೆಂಟಲ್ / ಆಯುಷ್ / ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತï ಸೈನ್ಸ್ ಕೋರ್ಸುಗಳಿಗೆ ಸೇರಲು ಆಸಕ್ತಿ ಇರುವ ಅಭ್ಯರ್ಥಿಗಳೂ ಈಗಲೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಯುಜಿನೀಟ್-2024 ಫಲಿತಾಂಶಗಳ ಪ್ರಕಟಣೆಯ ನಂತರ ಕೆಇಎ ನಲ್ಲಿ ನೋಂದಾಯಿಸಲಾಗಿರುವ ಅಭ್ಯರ್ಥಿಗಳಿಗೆ ನೀಟ್ ಸ್ಕೋರ್ ಮತ್ತು ರೋಲ್ ನಂಬರ್ ದಾಖಲಿಸಲು ಇಂಟರ್‍ಫೇಸ್ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.
5
+ ಸಿಇಟಿ ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ಭಾಗವಾಗಿ ಈ ಬಾರಿ ಅರ್ಜಿಯನ್ನು ಅರ್ಜಿ ಹಾಗೂ ಪರಿಶೀಲನೆ ನಮೂನೆಯಲ್ಲಿ ಹೊರತರಲಾಗಿದೆ. ಇದರಿಂದಾಗಿ, ಅಭ್ಯರ್ಥಿಗಳ ದಾಖಲಾತಿಗಳನ್ನು ಭೌತಿಕವಾಗಿ ಪರಿಶೀಲಿಸಲು ಈ ಮುಂಚೆ ಹಿಡಿಯುತ್ತಿದ್ದ ಹೆಚ್ಚಿನ ಸಮಯ ಉಳಿತಾಯವಾಗುತ್ತದೆ ಎಂದು ವಿವರಿಸಲಾಗಿದೆ.
6
+ ಟಿವಿ ನೇರ ಸಂದರ್ಶನದಲ್ಲಿ ಪ್ರತ್ಯಕ್ಷರಾದ ಬಂದೂಕುದಾರಿಗಳ ಬಂಧನ
7
+ ಹೊಸ ಮಾದರಿಯಲ್ಲಿ, ಅಭ್ಯರ್ಥಿಗಳ ವಿವರಗಳನ್ನು ಅಂದರೆ, ಶಾಲೆಗಳ ವ್ಯಾಸಂಗ, ಕನ್ನಡ ಮಾಧ್ಯಮ, ಜಾತಿ, ಆದಾಯ ಮುಂತಾದ ವಿವರಗಳನ್ನು ಸ್ಯಾಟ್ಸ್ ಹಾಗೂ ಕಂದಾಯ ಇಲಾಖೆಯ ವೆಬ್ ಸರ್ವೀಸ್ ಮುಖಾಂತರ ಆನ್ಲೈನ್ ಮೂಲಕವೇ ಪರಿಶೀಲಿಸಲಾಗುವುದು, ಅಭ್ಯರ್ಥಿಗಳು ಪ್ರತ್ಯೇಕವಾಗಿ ದಾಖಲೆಗಳ ಪರಿಶೀಲನೆಗೆ ಭೌತಿಕವಾಗಿ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಪ್ರತಿ ವರ್ಷವೂ ಸುಮಾರು ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ ಪರಿಶೀಲನೆಗಳ ಕಾರ್ಯಗಳು ಈಗ ಅರ್ಜಿ ಸಲ್ಲಿಸುವ ಸಮಯದಲ್ಲಿಯೇ ನಡೆಯಲಿವೆ ಎಂದು ತಿಳಿಸಲಾಗಿದೆ.
8
+ ಹೀಗಾಗಿ, ಅಭ್ಯರ್ಥಿಗಳು ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ಎಚ್ಚರಿಕೆಯಿಂದ ಭರ್ತಿ ಮಾಡಲು ಮತ್ತು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‍ಲೋಡ್ ಮಾಡಲು ಸೂಚಿಸಲಾಗಿದೆ. ಪ್ರಾಕಾರವು ಸುಮಾರು 250 ಕ್ಕೂ ಹೆಚ್ಚು ನುರಿತ ಉಪನ್ಯಾಸಕರುಗಳನ್ನು ���ಾಸ್ಟರ್ ಟ್ರೈನರ್ ಎಂದು ಗುರುತಿಸಿ ಅವರುಗಳಿಗೆ ಅರ್ಜಿ ಸಲ್ಲಿಸುವ ಬಗ್ಗೆ ತರಬೇತಿಯನ್ನು ಈಗಾಗಲೇ ನೀಡಿದೆ. ಈ ಮಾಸ್ಟರ್ ಟ್ರೈನರ್‍ಗಳು, ಪ್ರತಿ ವಿಜ್ಞಾನ ಕಾಲೇಜಿನಲ್ಲಿ ಒಂದಿಬ್ಬರು ಉಪನ್ಯಾಸಕರನ್ನು ಗುರುತಿಸಿ ಅವರಿಗೆ ಕಾಲೇಜು ಟ್ರೈನರ್‍ತರಬೇತಿ ನೀಡಿ ಸಜ್ಜುಗೊಳಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಬಗ್ಗೆ ಸಂದೇಹಗಳಿದ್ದಲ್ಲಿ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿನ ಕಾಲೇಜು ಟ್ರೈನರ್ ಗಳನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆಯಬೇಕು ಎಂದೂ ಸೂಚಿಸಲಾಗಿದೆ.
9
+ ಮೊಬೈಲ್ ಆ್ಯಪ್ ಅಭಿವೃದ್ಧಿ:ಇದರ ಜೊತೆಗೆ, ಸುಧಾರಣೆಯ ಮತ್ತೊಂದು ಕ್ರಮವಾಗಿ ಕೆಇಎ ಮೊಬೈಲ್ ಆಪ್ ಅಭಿವೃದ್ಧಿ ಪಡಿಸಿದ್ದು ಇದನ್ನು ಕೆಇಎ ವೆಬ್‍ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಇದರಿಂದಾಗಿ, ಪರೀಕ್ಷಾ ವೇಳಾಪಟ್ಟಿ, ಸೂಚನೆ, ಅರ್ಜಿ ಪ್ರಕ್ರಿಯೆಯ ಯಾವ ಹಂತದಲ್ಲಿದೆ ಇತ್ಯಾದಿ ಮಾಹಿತಿಯನ್ನು ವಾಟ್ಸಾಪ್ ಮೆಸೇಜ್ ಮೂಲಕವೇ ಪಡೆಯಬಹುದು. ಇದು, ಅಭ್ಯರ್ಥಿಗಳು ಪದೇಪದೇ ವೆಬ್‍ಸೈಟ್ ಗೆ ಹೋಗಿ ಪರಿಶೀಲಿಸಬೇಕಾದ ಅಗತ್ಯವನ್ನು ತಪ್ಪಿಸುತ್ತದೆ. ಶುಲ್ಕ ಪಾವತಿ ಹಾಗೂ ಅರ್ಜಿಗೆ ಸಂಬಂಸಿದ ವಿವರಗಳು ಅಭ್ಯರ್ಥಿಗಳ ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ.
eesanje/url_46_266_3.txt ADDED
@@ -0,0 +1,9 @@
 
 
 
 
 
 
 
 
 
 
1
+ ಭೀಕರ ಬರಗಾಲವಿದ್ದರೂ ರೈತರಿಗೆ ಸ್ಪಂದಿಸದ ಸರ್ಕಾರ : ಬೊಮ್ಮಾಯಿ ಆಕ್ರೋಶ
2
+ ಬೆಂಗಳೂರು,ಜ.9-ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ನಿಯಲ್ಲಿ ಎಷ್ಟು ಹಣವಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
3
+ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಪೀಡಿತ ಪ್ರದೇಶಗಳಿಗೆ ತಕ್ಷಣವೇ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ಮಾಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು. ಬರ, ಪ್ರವಾಹದಂತಹ ಸಂಕಷ್ಟ ಸಂದರ್ಭದಲ್ಲಿ ಜನರ ನೆರವಿಗೆ ಸರ್ಕಾರ ಧಾವಿಸಿ ಸಹಾಯ ಮಾಡಿದರೆ ಸರ್ಕಾರ ಜೀವಂತ ಇದ್ದಂತೆ. ಸಂಕಷ್ಟದಲ್ಲಿರುವ ರೈತರ ಕಡೆಗೆ ನೋಡದಿದ್ದರೆ ಅದು ಸತ್ತಂತೆ ಎಂದು ಟೀಕಿಸಿದರು.
4
+ 18 ಸಾವಿರ ಕೋಟಿ ರೂ. ಬರಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವ ರಾಜ್ಯ ಸರ್ಕಾರ ಕೇವಲ 105 ಕೋಟಿ ರೂ. ಮಾತ್ರ ಅಂದರೆ ಶೇ.1ರಷ್ಟೂ ಬಿಡುಗಡೆ ಮಾಡಿಲ್ಲ. ರೈತರಿಗೆ ತಲಾ 2000 ರೂ. ನೀಡುವುದಾಗಿ ಹೇಳಿ ತಿಂಗಳು ಕಳೆದರೂ ಹಣ ಬಿಡುಗಡೆ ಮಾಡಿಲ್ಲ. ಆಧಾರ್ ಜೋಡಣೆಯ ಕಥೆ ಹೇಳುತ್ತಿದ್ದಾರೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಮಾಹಿತಿ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ 14 ಲಕ್ಷ ರೈತರಿಗೆ ನೇರವಾಗಿ ಹಣ ವರ್ಗಾವಣೆ ಮಾಡಿದ್ದೆವು ಎಂದರು.
5
+ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅಭಿವೃದ್ದಿ ಕಾಮಗಾರಿಗಳು ಆರಂಭವಾಗಿಲ್ಲ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ 3 ತಿಂಗಳಿಗೊಮ್ಮೆ ಹಣ ಬಿಡುಗಡೆ ಮಾಡಲಿದೆ ಎಂದು ಹೇಳಿದರು.
6
+ ಫೆಡೆಕ್ಸ್ ಹೆಸರಿನಲ್ಲಿ ಕೊರಿಯರ್ ಎಂದು ಹೇಳಿ ವಂಚಿಸಿದ್ದ 14 ಮಂದಿ ವಂಚಕರ ಬಂಧನ
7
+ ಸರ್ಕಾರ ಉಳಿಯುವುದಿಲ್ಲ:ರೈತರು ಶಾಪ ಹಾಕಿದರೆ ಸರ್ಕಾರ ಒಂದು ಕ್ಷಣವೂ ಉಳಿದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಕಳೆದ 70 ವರ್ಷಗಳಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ನೋಡಿಲ್ಲ. ಬೇಜವಾಬ್ದಾರಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ. ರಾಜ್ಯದಲ್ಲಿ ಸುಮಾರು 600ರಿಂದ 700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಆ ಕಡೆ ಸರ್ಕಾರ ತಿರುಗಿಯೂ ನೋಡಿಲ್ಲ. ತೀವ್ರ ಬರವಿದ್ದರೂ ರೈತರಿಗೆ ಪರಿಹಾರ ಧನ ತಲುಪಿಸಿಲ್ಲ. ರೈತರಿಗೆ ದಿಕ್ಕು ತೋಚದಂತೆ ಮಾಡಿದ್ದಾರೆ.
8
+ ಅನಗತ್ಯವಾಗಿ ಡಿಸಿಎಂ ಹುದ್ದೆಯ ಚರ್ಚೆಗೆ ಖರ್ಗೆ ಆಕ್ರೋಶ
9
+ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಕಿಂಚಿತ್ತೂ ಮಾನವೀಯತೆ ತೋರಿಲ್ಲ ಎಂದು ಅವರು ವಾಗ್ದಾಳಿ ಮಾಡಿದರು. ನಮ್ಮ ಸರ್ಕಾರ ಅಧಿಕಾರಿದಲ್ಲಿದ್ದಾಗ ಕೇಂದ್ರದ ನೆರವಿಗೆ ಕಾಯದೆ ಡಿಬಿ���ಿ ಮೂಲಕ ರೈತರಿಗೆ 3 ಸಾವಿರ ಕೋಟಿ ರೂ. ನೀಡಿದ್ದೆವು. ಆದರೆ ಈ ಸರ್ಕಾರ 100 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳುತ್ತಾರೆ. ರೈತರಿಗೆ ಬರೀ 3 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು.
eesanje/url_46_266_4.txt ADDED
@@ -0,0 +1,6 @@
 
 
 
 
 
 
 
1
+ ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ತಿರಸ್ಕಾರ : ಕನ್ನಡಿಗರ ಆಕ್ರೋಶ
2
+ ಬೆಂಗಳೂರು,ಜ.9- ಗಣರಾಜ್ಯೋತ್ಸವದ ಹೆಮ್ಮೆಯ ಪರೇಡ್‍ನಲ್ಲಿ ಭಾಗವಹಿಸಲು ರಾಜ್ಯಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸುವ ಮೂಲಕ ಕೇಂದ್ರ ಸರ್ಕಾರ ಮತ್ತೊಮ್ಮೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಐತಿಹಾಸಿಕವಾದ ಜಾಥಾ ನಡೆಯಲಿದೆ. ಅದರಲ್ಲಿ ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳುತ್ತವೆ. ಗಣರಾಜ್ಯೋತ್ಸವದ ಪೆರೇಡ್‍ನಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ ವಿಚಾರ. ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ದೇವತೆ ಅಣ್ಣಮ್ಮ ದೇವಿಯ ಪ್ರತಿಕೃತಿಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
3
+ ಆದರೆ ಕೇಂದ್ರ ಸರ್ಕಾರ ರಾಜ್ಯದ ಮನವಿಯನ್ನು ತಳ್ಳಿ ಹಾಕಿದೆ. ಸ್ತಬ್ಧ ಚಿತ್ರದಲ್ಲಿ ಭಾಗವಹಿಸಲು ಈ ಬಾರಿ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಬದಲಾಗಿ ವಸ್ತು ಪ್ರದರ್ಶನ ಮಳಿಗೆಯಲ್ಲಿ ರಾಜ್ಯದ ಸ್ತಬ್ಧ ಚಿತ್ರವನ್ನು ಪ್ರದರ್ಶನ ಮಾಡಿಕೊಳ್ಳಬಹುದು ಎಂದು ತಿಳಿಸಿದೆ. ಕಳೆದ ವರ್ಷ ಇದೇ ರೀತಿ ಸ್ತಬ್ಧ ಚಿತ್ರ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು. ಚುನಾವಣಾ ವರ್ಷವಾಗಿದ್ದರಿಂದಾಗಿ ಅದು ರಾಜಕೀಯ ಸ್ವರೂಪವನ್ನು ಪಡೆದುಕೊಂಡಿತ್ತು. ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರಕ್ಕೆ ಮುಜುಗರ ಎದುರಾದಾಗ ಪ್ರಮುಖ ನಾಯಕರು ಕೇಂದ್ರದ ಮೇಲೆ ಒತ್ತಡ ತಂದು ವಿಶೇಷ ಅನುಮತಿ ಪಡೆಯುವ ಮೂಲಕ ಸ್ತಬ್ಧ ಚಿತ್ರ ಮೆರವಣಿಗೆಯಲ್ಲಿ ರಾಜ್ಯದ ಪ್ರತಿಕೃತಿ ಭಾಗವಹಿಸಲು ಅವಕಾಶ ಪಡೆದುಕೊಂಡಿದ್ದರು.
4
+ ಫೆಡೆಕ್ಸ್ ಹೆಸರಿನಲ್ಲಿ ಕೊರಿಯರ್ ಎಂದು ಹೇಳಿ ವಂಚಿಸಿದ್ದ 14 ಮಂದಿ ವಂಚಕರ ಬಂಧನ
5
+ ಕಳೆದ ಬಾರಿ ಅನುಮತಿ ನಿರಾಕರಿಸಿದಾಗಲೇ ನಾನಾ ರೀತಿಯ ಸಮರ್ಥನೆಗಳು ಕೇಳಿಬಂದಿದ್ದವು. ಪ್ರತಿ ವರ್ಷವೂ ಸೀಮಿತ ಸಂಖ್ಯೆಯ ರಾಜ್ಯಗಳಿಗೆ ಮಾತ್ರ ಪೆರೇಡ್‍ನಲ್ಲಿ ಸ್ತಬ್ಧಚಿತ್ರ ಮೆರವಣಿಗೆ ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಅದು ರೊಟೇಷನ್ ಆಧಾರದ ಮೇಲೆ ಬದಲಾಗುವುದರಿಂದ ಸಹಜವಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿತ್ತು.
6
+ ಚುನಾವಣೆಯ ಕಾರಣಕ್ಕೆ ವಿಶೇಷ ಅನುಮತಿ ನೀಡಿದ್ದ ಕೇಂದ್ರ ಸರ್ಕಾರ ಈ ಬಾರಿ ಮತ್ತೆ ರೊಟೇಷನ್ ನೆಪ ಹೇಳಿ ಅನುಮತಿಯನ್ನು ತಳ್ಳಿ ಹಾಕಿದೆ. ವಾಸ್ತವಾಂಶ ಏನೇ ಇದ್ದರೂ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡದೇ ಇರುವುದು ಕನ್ನಡ ವಿರೋ ಧೋರಣೆ ಎಂದು ಬಿಂಬಿಸಲಾಗುತ್ತಿದೆ. ಹಲವಾರು ಸಚಿವರು ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದ್ದಾರೆ. ಅನುದಾನ, ತೆರಿಗೆ ಪಾಲು ಮತ್ತು ಕೇಂದ್ರ ಪುರಸ್ಕøತ ಯೋಜನೆಗಳ ಆರ್ಥಿಕ ನೆರವಿನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ನೀರಾವರಿ ಯೋಜನೆಗಳಿಗೆ ���ಿರಪೇಕ್ಷಣಾ ಪತ್ರ ನೀಡುವಲ್ಲಿಯೂ ತಾರತಮ್ಯ ಮಾಡಿ ಕರ್ನಾಟಕದ ವಿಷಯದಲ್ಲಿ ಮಲತಾಯಿ ಧೋರಣೆ ನಡೆಸಲಾಗುತ್ತಿದೆ ಎಂಬ ಟೀಕೆಯನ್ನು ಕಾಂಗ್ರೆಸ್ ಮಾಡುತ್ತಿದೆ.
eesanje/url_46_266_5.txt ADDED
@@ -0,0 +1,8 @@
 
 
 
 
 
 
 
 
 
1
+ ಲೋಕಸಭೆ ಚುನಾವಣೆ ಕಾರ್ಯತಂತ್ರದ ಬಗ್ಗೆ ಸುರ್ಜೆವಾಲರೊಂದಿಗೆ ಪರಮೇಶ್ವರ್ ಚರ್ಚೆ
2
+ ಬೆಂಗಳೂರು,ಜ.9- ಕಾಂಗ್ರೆಸ್ ಹೈಕಮಾಂಡ್ ಪ್ರತಿನಿಧಿಯಾಗಿ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಬಳಿ ಕಾಂಗ್ರೆಸ್‍ನ ಹಿರಿಯ ಸಚಿವರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಹಕ್ಕು ಪ್ರತಿಪಾದಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಲೋಕಸಭೆ ಚುನಾವಣೆ ತಯಾರಿಯ ಕುರಿತಂತೆ ಚರ್ಚೆ ನಡೆಸಲು ರಣದೀಪ್ ಸಿಂಗ್ ಸುರ್ಜೆವಾಲ ನಮ್ಮನ್ನು ಆಹ್ವಾನಿಸಿದ್ದು, ಹಿರಿಯ ಸಚಿವರಾಗಿರುವುದರಿಂದ ಸಹಜವಾಗಿ ನಮ್ಮ ಜೊತೆ ಹೈಕಮಾಂಡ್ ಚರ್ಚೆ ನಡೆಸಿದೆ ಎಂದರು.
3
+ ಈ ವೇಳೆ ಲೋಕಸಭೆ ಚುನಾವಣೆಗೂ ಮುನ್ನವೇ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯಾದರೆ ಪಕ್ಷಕ್ಕೆ ಅನುಕೂಲ ವಾಗಲಿದೆ ಎಂದು ಹಕ್ಕು ಪ್ರತಿಪಾದಿಸಲಾಗಿದೆ. ಅಂತಿಮವಾಗಿ ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದರು. ಆದರೆ ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಚಿವರೊಂದಿಗೆ ಪ್ರಮುಖವಾಗಿ ಲೋಕಸಭೆಯ ಚುನಾವಣೆಯ ತಯಾರಿಯ ಬಗ್ಗೆಯೇ ಹೆಚ್ಚು ಚರ್ಚೆಯಾಯಿತು. ವಿಶೇಷವಾಗಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಾಗಿಯೇ ಹೆಚ್ಚು ಚರ್ಚೆ ನಡೆಯಲಿಲ್ಲ. ಸಮಾಲೋಚನೆಯ ನಡುವೆ ಕೆಲವರು ವಿಚಾರವನ್ನು ಪ್ರಸ್ತಾಪಿಸಿದರು ಎಂದು ಹೇಳಿದರು.
4
+ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
5
+ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂಬು ದರ ಬಗ್ಗೆ ಪ್ರಸ್ತಾಪಿಸಲಾಗಿದೆ. ನನಗೆ ಕೆಪಿಸಿಸಿ ಅಧ್ಯಕ್ಷನಾಗಿ 2 ಬಾರಿ ಲೋಕಸಭೆ ಚುನಾವಣೆ ನಡೆಸಿದ ಅನುಭವ ಇದೆ. ಅದರ ಆಧಾರದ ಮೇಲೆ ಕೆಲ ಸಲಹೆ ನೀಡಿದ್ದೇನೆ ಎಂದರು. ಅನಿವಾರ್ಯ ಸಂದರ್ಭ ಎದುರಾಗಿದ್ದೇ ಆದರೆ ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಬೇಕಾಗುತ್ತದೆ ಎಂದು ಹೈಕಮಾಂಡ್ ಸಂದೇಶ ರವಾನಿಸಿದೆ. ಕಳೆದ ಬಾರಿ ಕೃಷ್ಣಭೈರೇಗೌಡ ಅವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿತ್ತು. ಅದನ್ನು ಉದಾಹರಣೆಯಾಗಿ ಚರ್ಚಿಸಲಾಗಿದ್ದು, ಸಂದರ್ಭ ಬಂದರೆ ಸಚಿವರು ಸ್ರ್ಪಧಿಗಳಾಗಲು ಸಿದ್ಧವಾಗಿರಬೇಕಾಗುತ್ತದೆ ಎಂದು ಹೈಕಮಾಂಡ್ ತಿಳಿಸಿದೆ ಎಂದರು.
6
+ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಈಗಾಗಲೇ ಚರ್ಚೆಗಳಾಗಿವೆ. ಯಾರೆಲ್ಲಾ ಆಕಾಂಕ್ಷಿಗಳಿದ್ದಾರೆ, ಸಮರ್ಥರ್ಯಾರು, ಜಾತಿವಾರು ಲೆಕ್ಕಾಚಾರವೇನು, ಯಾರನ್ನು ಕಣಕ್ಕಿಳಿಸಬೇಕು ಎಂಬ ಮಾಹಿತಿಗಳು ಈಗಾಗಲೇ ಲಭ್ಯವಿದೆ. ಅದರ ಆಧಾರದ ಮೇಲೆ ಮುಂದಿನ ಚರ್ಚೆಗಳು ನಡೆಯಲಿವೆ. ಎರಡು ದಿನ ಬಿಟ್ಟು ಎಲ್ಲಾ ಸಚಿವರೂ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.
7
+ ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸ್ ವಶಕ್ಕೆ
8
+ ಗಣರಾಜ್ಯೋತ್ಸವ ಸಂದರ್ಭದಲ್ಲಿ ಯಾವ ರೀತಿಯ ಸಂದೇಶ ಸಾರುವ ಸ್ತಬ್ಧ ಚಿತ್ರವನ್ನು ನಿರ್ಮಿಸಬೇಕೆಂಬ ಬಗ್ಗೆ ರಾಜ್ಯಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಯಾಂತ್ರಿಕವಾಗಿ ರವಾನೆ ಮಾಡಿರುವ ಮಾರ್ಗಸೂಚಿಗಳನ್ನು ಪರಿಗಣಿಸುತ್ತೇವೆ ಎಂದು ಹೇಳಿದರು.
eesanje/url_46_266_6.txt ADDED
@@ -0,0 +1,9 @@
 
 
 
 
 
 
 
 
 
 
1
+ ಅನಗತ್ಯವಾಗಿ ಡಿಸಿಎಂ ಹುದ್ದೆಯ ಚರ್ಚೆಗೆ ಖರ್ಗೆ ಆಕ್ರೋಶ
2
+ ಕಲ್ಬುರ್ಗಿ,ಜ.9- ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪದೇಪದೇ ಹೆಚ್ಚುವರಿ ಉಪಮುಖ್ಯಮಂತ್ರಿ ಸೃಷ್ಟಿ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟ್ಟೆಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಉಪಮುಖ್ಯಮಂತ್ರಿ ಸೃಷ್ಟಿಯ ಬಗ್ಗೆ ಈವರೆಗೂ ತಮ್ಮವರೆಗೂ ಯಾವುದೇ ವಿಚಾರಗಳು ಬಂದಿಲ್ಲ. ಇಂತಹ ಯಾವುದೇ ಪ್ರಶ್ನೆಗಳಿಗೆ ಉತ್ತರ ಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರನ್ನು ಕೇಳಿ ಎಂದು ಸಲಹೆ ನೀಡಿದರು.
3
+ ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಊಹಾಪೂಹಗಳ ಚರ್ಚೆಗೆ ಅವಕಾಶ ನೀಡಬಾರದು. ತಮ್ಮ ಆದ್ಯತೆ ಉತ್ತಮ ಸರ್ಕಾರ ನೀಡುವತ್ತ ಇರಬೇಕು. ಜನರಿಗೆ ಕೊಟ್ಟ ಭರವಸೆಗಳು ಮತ್ತು ಪಂಚಖಾತ್ರಿಗಳನ್ನು ಸಮರ್ಪಕವಾಗಿ ಅನುಷ್ಠಾನ ತರುವುದು ನಮ್ಮ ಗುರಿಯಾಗಿರಬೇಕು. ಜನರ ಸಮಸ್ಯೆಗೆ ಗಮನ ನೀಡಬೇಕು. ಗುರಿ ಮುಟ್ಟುವುದಕ್ಕೆ ಆದ್ಯತೆ ನೀಡಬೇಕು. ಈ ವಿಷಯವಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್‍ರವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
4
+ ಮೋದಿ ಎಲ್ಲವನ್ನೂ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ :ಮಾಲ್ಡೀವ್ಸ್ ವಿಚಾರವಾಗಿ ಪ್ರತಿಕ್ರಿಯಿಸಿದ ಖರ್ಗೆ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲವನ್ನೂ ವೈಯಕ್ತಿವಾಗಿ ತೆಗೆದುಕೊಳ್ಳುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಲವು ವಿಷಯಗಳಲ್ಲಿ ನೆರೆಹೊರೆಯವರೊಂದಿಗೆ ಸೌಹಾರ್ದಯುತವಾದ ಸಂಬಂಧ ಇಟ್ಟುಕೊಳ್ಳಬೇಕಾಗುತ್ತದೆ. ಒಂದು ವೇಳೆ ಕೆಟ್ಟ ಸಂದರ್ಭ ಬಂದರೆ ನಾವು ಹೋರಾಟ ನಡೆಸಬೇಕು. ಈ ಹಿಂದೆ ಇಂದಿರಾಗಾಂಧಿಯವರು ಪಾಕಿಸ್ತಾನದ ವಿರುದ್ಧ ಹೋರಾಟ ಮಾಡಿ ಕಾಂಗ್ರೆಸ್ ಪಕ್ಷವನ್ನು ಪ್ರತ್ಯೇಕಗೊಳಿಸಿದರು. ಆ ರೀತಿ ಸಂದರ್ಭಾನುಸಾರ ನಡೆದುಕೊಳ್ಳಬೇಕಿದೆ ಎಂದರು.
5
+ ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್
6
+ ಪ್ರಧಾನ ನರೇಂದ್ರ ಮೋದಿ ಇದ್ದಕ್ಕಿದ್ದಂತೆ ಯಾರನ್ನೋ ಅಪ್ಪಿಕೊಳ್ಳುತ್ತಾರೆ, ಇದ್ದಕ್ಕಿದ್ದಂತೆ ಇನ್ನ್ಯಾರನ್ನೋ ಕೆಟ್ಟವರು ಎಂದು ಬಿಂಬಿಸುತ್ತಾರೆ. ಹಿಂದಿನ ನೀತಿಗಳನ್ನು ಟೀಕೆ ಮಾಡುವುದು, ಜೀವನಪರ್ಯಂತ ನೆಹರೂ ಅವರನ್ನೇ ನಿಂದಿಸುತ್ತಾರೆ ಎಂದು ಹೇಳಿದರು.
7
+ ನೆರೆಯ ರಾಷ್ಟ್ರಗಳೊಂದಿಗೆ ಸೌಹಾರ್ದತೆ ಅಗತ್ಯ :ನೆರೆಹೊರೆಯ ಸಂಬಂಧ ಉತ್ತಮವಾಗಿರಬೇಕು. ಸಣ್ಣಪುಟ್ಟ ಊರಿನಲ್ಲಾದರೆ ನೆರೆಹೊರೆಯ ಸಂಬಂಧ ಕೆಟ್ಟರೆ ಮನೆ ಖಾಲಿ ಮಾಡಬಹುದು, ಆದರೆ ದೇಶಗಳ ವಿಷಯದಲ್ಲಿ ಈ ರೀತಿ ಸಾಧ್ಯವಿಲ್ಲ. ಗಡಿಯಲ್ಲಿ ನೆರೆಯ ರಾಷ್ಟ್ರಗಳನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಉತ್ತಮ ಸಂಬಂಧ ಇಟ್ಟುಕೊಳ್ಳುವುದು ಅನಿವಾರ್ಯ ಎಂದರು. ಅದರ ಮೇಲೆ ನಮ್ಮ ರಾಷ್ಟ್ರಕ್ಕೆ ತೊಂದರೆಯಾದರೆ ಅಥವಾ ಮೈಮೇಲೆ ಬಂದರೆ ನಮ್ಮ ದೇಶದ ಐಕ್ಯತೆ ಹಾಗೂ ಸುರಕ್ಷತೆಗಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಹೇಳಿದರು.
8
+ ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್
9
+ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಟ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಣಯ ಕೈಗೊಂಡಿದೆ. ಅದರ ಬಗ್ಗೆ ಚರ್ಚೆಯನ್ನು ನಡೆಸಿದ್ದೇವೆ. ಸಂಯೋಜಕರನ್ನು ನೇಮಿಸಲಾಗಿದೆ. ಇಂದು ತಾವು ದೆಹಲಿಗೆ ತೆರಳುತ್ತಿದ್ದು, ನಾಳೆ ವಿವಿಧ ರಾಜ್ಯಗಳ ಕಾಂಗ್ರೆಸ್ ಘಟಕಗಳ ಜೊತೆ ಚರ್ಚೆ ನಡೆಸಲಾಗುವುದು. ಈಗಾಗಲೇ ಲೋಕಸಭಾ ಕ್ಷೇತ್ರವಾರು, ಜಿಲ್ಲಾವಾರು ವೀಕ್ಷಕರನ್ನು ಕಾಂಗ್ರೆಸ್‍ನಿಂದ ನೇಮಿಸಲಾಗಿದೆ. ರಾಜ್ಯದಲ್ಲೂ ನಾಳೆ ಚುನಾವಣಾ ತಯಾರಿ ಸಂಬಂಧಪಟ್ಟಂತೆ ಸಭೆ ನಡೆಯಲಿದೆ ಎಂದರು.
eesanje/url_46_266_7.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
2
+ ಬೆಂಗಳೂರು,ಜ.9- ರಾಜ್ಯದಲ್ಲಿ ಸಂಭವಿಸಿರುವ ಭೀಕರ ಬರ ನಿರ್ವಹಣೆಗೆ ರಾಜ್ಯಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಬರ ಪರಿಹಾರಕ್ಕೆ ರಾಜ್ಯಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಬಿಜೆಪಿ ಶಾಸಕರ ನಿಯೋಗ ಆಗ್ರಹಿಸಿದೆ.
3
+ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ ನಾರಾಯಣ, ಮಾಜಿ ಸಚಿವರಾದ ಕೆ.ಗೋಪಾಲಯ್ಯ ಮುನಿರತ್ನ, ಶಾಸಕ ಮುನಿರಾಜು ಹಾಗೂ ರಘು ಅವರನ್ನೊಳಗೊಂಡ ನಿಯೋಗವು ರಾಜಭವನದಲ್ಲಿಂದು ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಈ ಮನವಿ ಮಾಡಿದೆ.
4
+ ತಾವು ಮಧ್ಯಪ್ರವೇಶಿಸಿ, ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಬಿಡುಗಡೆ ಮಾಡಲು ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರನ್ನು ಕೋರಿದ್ದಾರೆ. ಹಿಂದಿನ ಸರ್ಕಾರದಲ್ಲಿ ಎಸ್‍ಡಿಆರ್‍ಎಫ್ ಅನುದಾನಕ್ಕಿಂತ 2 ಪಟ್ಟು ಪರಿಹಾರವನ್ನು ನೀಡಲಾಗಿತ್ತು. ಕೇಂದ್ರ ಸರ್ಕಾರದ ಎನ್‍ಡಿಆರ್‍ಎಫ್ ಹಣ ಬಿಡುಗಡೆಗೆ ಕಾಯದೆ ರಾಜ್ಯಸರ್ಕಾರದಿಂದ ರೈತರಿಗೆ ತುರ್ತಾಗಿ ಹಣ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ ಈಗಲೂ ಹಣ ಬಿಡುಗಡೆ ಮಾಡಬೇಕು.
5
+ ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್
6
+ ಚಳಿಗಾಲದ ಅಧಿವೇಶನಕ್ಕೂ ಮುನ್ನ ಪ್ರತಿ ರೈತರಿಗೆ 2 ಸಾವಿರ ರೂ. ಪರಿಹಾರ ನೀಡುವ ಘೋಷಣೆ ಮಾಡಿದ್ದ ರಾಜ್ಯಸರ್ಕಾರ ಇದುವರೆಗೂ ಬಿಡುಗಡೆ ಮಾಡಿಲ್ಲ. ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲದ ಅಸಲು ತೀರಿಸಿದ ರೈತರ ಬಡ್ಡಿ ಮನ್ನಾ ಮಾಡುವುದಾಗಿ ಸರ್ಕಾರ ಘೋಷಿಸಿದೆ. ಇದರ ಬದಲಿಗೆ ರೈತರು ಪಡೆದಿರುವ 2 ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಬೇಕು. ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಮನವಿ ಪತ್ರದಲ್ಲಿ ನಿಯೋಗ ಒತ್ತಾಯಿಸಿದೆ.
7
+ ಶಾಸಕರ ಅಧ್ಯಕ್ಷತೆಯಲ್ಲಿರುವ ಟಾಸ್ಕ್‍ಫೋರ್ಸ್‍ಗೆ ಪರಮಾಧಿಕಾರ ನೀಡಿ, ಪ್ರತಿ ತಾಲೂಕಿಗೆ ಕನಿಷ್ಠ 5 ಕೋಟಿ ರೂ. ಪರಿಹಾರ ನೀಡಬೇಕು. ಗರ್ಭಿಣಿಯರು, ಬಾಣಂತಿಯರು,ನವಜಾತ ಶಿಶುಗಳ ಪೌಷ್ಠಿಕತೆಗಾಗಿ ಉತ್ತಮ ಪೌಷ್ಠಿಕ ಆಹಾರವನ್ನು ಒದಗಿಸಬೇಕು. ಎನ್‍ಡಿಆರ್‍ಎಫ್ ಮಾರ್ಗಸೂಚಿ ಪ್ರಕಾರ ಬರಗಾಲ ಸಂದರ್ಭದಲ್ಲಿ ಕುಟುಂಬದ ತಲಾ ಇಬ್ಬರಿಗೆ 30 ದಿನದವರೆಗೆ ಆರ್ಥಿಕ ನೆರವು ನೀಡಬೇಕು. ಇದರಿಂದ ಗುಳೆ ಹೋಗುವುದನ್ನು ತಪ್ಪಿಸಬಹುದು.
8
+ ಜಾನುವಾರುಗಳಿಗೆ ಬರುವ ಮಾರಣಾಂತಿಕ ಖಾಯಿಲೆಗಳಿಗೆ ಅಗತ್ಯವಿರುವ ಲಸಿಕೆ ನೀಡಬೇಕು ಹಾಗೂ ಮೇವು ಒದಗಿಸಬೇಕು. ಅಗತ್ಯವಿರುವ ಕಡೆಗಳಲ್ಲಿ 2022 ರಲ್ಲಿ ನ��ಡಿದ ಮಾದರಿಯಲ್ಲೇ ಬರದಿಂದ ಬರಲಿರುವ ಕುಟುಂಬಗಳಿಗೆ ಆಹಾರ ಕಿಟ್ ನೀಡಬೇಕು. ಅತಿವೃಷ್ಠಿಯಾದ ಸಮಯದಲ್ಲಿ ಹಿಂದಿನ ಸರ್ಕಾರ ರಾಜ್ಯದ ಖಜಾನೆಯಿಂದಲೇ ನೇರವಾಗಿ ನೆರೆಯನ್ನು ನೀಡಿದ ಮಾದರಿಯಲ್ಲೇ ಬರ ಪರಿಹಾರಕ್ಕೆ ವಿಶೇಷ ಅನುದಾನ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.
9
+ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 324 ಕೋಟಿ ರೂ. ಹಣವಿದ್ದು, ಇದು ಬರಪೀಡಿತ 224 ತಾಲೂಕುಗಳ ನಿರ್ವಹಣೆಗೆ ಸಾಕಾಗುವುದಿಲ್ಲ. 48.15 ಲಕ್ಷ ಹೆಕ್ಟೇರ್‍ನಲ್ಲಿ ಬೆಳೆ ನಾಶವಾಗಿದ್ದು, ರೈತರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
10
+ ಕಲ್ಬುರ್ಗಿ, ಬೀದರ್, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ವತಿಯಿಂದ ಬರ ಅಧ್ಯಯನ ನಡೆಸಲಾಗಿದ್ದು, ರೈತರ ಪರಿಸ್ಥಿತಿ ಸಂಕಷ್ಟಮಯವಾಗಿದೆ ಎಂದು ಉಲ್ಲೇಖಿಸಲಾಗಿದೆ.
eesanje/url_46_266_8.txt ADDED
@@ -0,0 +1,7 @@
 
 
 
 
 
 
 
 
1
+ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
2
+ ಬೆಂಗಳೂರು, ಜ.9- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಅಕ್ರಮ ಸಂಪತ್ತು ಪತ್ತೆ ಮಾಡಿದ್ದಾರೆ. ಭ್ರಷ್ಟಾಚಾರ ದೂರು ಪರಿಶೀಲಿಸಿ ಈ ದಾಳಿ ನಡೆಸಲಾಗಿದ್ದು, ಅಪಾರ ಪ್ರಮಾಣದ ಅಕ್ರಮವಾಗಿ ಸಂಪಾದಿಸಿದ ಚರಾ ಮತ್ತು ಸ್ಥಿರಾಸ್ತಿಗಳನ್ನು ಬಹಿರಂಗ ಪಡಿಸಿದ್ದಾರೆ.
3
+ ಬೆಂಗಳೂರು, ರಾಮನಗರ, ಬಳ್ಳಾರಿ, ವಿಜಯನಗರ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳ್ಳಾರಿಯ ಜಿಲ್ಲೆಯ ಕುಂದೋಣ ಗ್ರಾಮ ಪಂಚಾಯಿತಿಯ ಪಿಡಿಒ ಪದ್ಮನಾಭ ಅವರಿಗೆ ಸೇರಿದ ತುಮಕೂರು, ದಾಬಾಸ್‍ಪೇಟೆಗಳಲ್ಲಿರುವ ಮನೆ ಹಾಗೂ ಕೆಲಸ ಮಾಡುವ ಕಚೇರಿಯಲ್ಲಿ ಶೋಧ ಕಾರ್ಯ ನಡೆದಿದೆ. ಈ ವೇಳೆ ನಿವಾಸದಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣಗಳು, ಕಂತೆ ಕಂತೆ ನೋಟು ಪತ್ತೆಯಾಗಿದೆ.
4
+ ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್
5
+ ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಅವರ ಕೂಡ್ಲಿಗಿ ಪಟ್ಟಣದ ಮನೆ, ಗುಡೇಕೋಟೆ ಗ್ರಾಮದಲ್ಲಿರುವ ತೋಟದ ಮನೆ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಇವರು ಪೆಟ್ರೋಲ್ ಬಂಕ್ ಹಾಗೂ ಹಲವೆಡೆ ನಿವೇಶನ, ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದೆ. ಈ ಅಧಿಕಾರಿ ಇತ್ತೀಚೆಗೆ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದರು.
6
+ ಬೆಂಗಳೂರಿನಲ್ಲಿ ಬಿಬಿಎಂಪಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಡಿ.ಮಂಜೇಶ್ ಅವರ ನಿವಾಸ, ಅವರ ಸ್ವಂತ ಊರಾದ ಮಂಡ್ಯ ಸೇರಿದಂತೆ ವಿವಿದೆಡೆ ದಾಳಿ ನಡೆಸಲಾಗಿದೆ. ಮದ್ದೂರಿನ ಎಸ್‍ಐ ಕೋಡಿಹಳ್ಳಿಯಲ್ಲಿರುವ ಅಜ್ಜಿ ಮನೆ ಹಾಗೂ ಸಂಬಂ„ಕರ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
7
+ ಇದಲ್ಲದೆ, ಹಲಗೂರು ಗ್ರಾಮ ಪಂಚಾಯಿತಿ ಸದಸ್ಯ ಸುರೇಂದ್ರ ಅವರ ಮನೆಯಲ್ಲೂ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಯ್ಯದ್ ಮುನೀರ್ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ಇದಲ್ಲದೆ, ಪಿಡಬ್ಲ್ಯೂಡಿ ಸೂಪರಿಂಡೆಂಟ್ ಎಂಜಿನಿಯರ್ ಸತೀಶ್‍ಬಾಬು ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಎಸ್‍ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಇಲ್ಲಿ ಬೆಲೆಬಾಳುವ ವಾಚ್‍ಗಳು, ಐಷಾರಾಮಿ ವಸ್ತುಗಳು, ಚಿನ್ನಾಭರಣ ಪತ್ತೆಯಾಗಿದೆ.
eesanje/url_46_266_9.txt ADDED
@@ -0,0 +1,8 @@
 
 
 
 
 
 
 
 
 
1
+ ಫೆಡೆಕ್ಸ್ ಹೆಸರಿನಲ್ಲಿ ಕೊರಿಯರ್ ಎಂದು ಹೇಳಿ ವಂಚಿಸಿದ್ದ 14 ಮಂದಿ ವಂಚಕರ ಬಂಧನ
2
+ ಬೆಂಗಳೂರು,ಜ.9- ಫೆಡೆಕ್ಸ್ ಹೆಸರಿನಿಂದ ಕೊರಿಯರ್ ಬಂದಿದೆ ಎಂದು ಸಾರ್ವಜನಿಕರಿಗೆ ಕರೆ ಮಾಡಿ ನಿಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ಹೆದರಿಸಿ ತಮ್ಮ ಖಾತೆಗಳಿಗೆ ಲಕ್ಷಾಂತರ ಹಣವನ್ನು ಆನ್‍ಲೈನ್ ಮುಖಾಂತರ ಹಾಕಿಸಿಕೊಳ್ಳುತ್ತಿದ್ದ 14 ಮಂದಿ ವಂಚಕರನ್ನು ವಿಶೇಷ ತಂಡದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಂಚಕರಿಂದ 25.47 ಲಕ್ಷ ಹಣವನ್ನು ಬ್ಯಾಂಕ್ ಖಾತೆಗಳನ್ನು ಫೀಜ್ ಮಾಡಿಸಿ ಮೊಬೈಲ್ ಹಾಗೂ ಲ್ಯಾಪ್‍ಟಾಪ್‍ಗಳನ್ನು ವಶಪಡಿಸಿಕೊಂಡಿದ್ದು, ಈ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.
3
+ ಈ ವಂಚಕರು ಸಾರ್ವಜನಿಕರಿಗೆ ಫೆಡೆಕ್ಸ್ ಹೆಸರಿನ ಮೂಲಕ ತಮಗೆ ಕೊರಿಯರ್ ಬಂದಿದೆ ಎಂದು ನಂಬಿಸಿ ಐವಿಆರ್‍ನಿಂದ ಕರೆ ಮಾಡಿ ನಿಮ್ಮ ಕೊರಿಯರ್ ಮುಂಬೈನಿಂದ ತೈವಾನ್‍ಗೆ ವರ್ಗಾವಣೆಯಾಗುತ್ತಿದೆ. ಅದರಲ್ಲಿ ನಿಮ್ಮ ಹೆಸರು ಮತ್ತು ಆಧಾರ್ ಕಾರ್ಡ್‍ನ್ನು ಉಪಯೋಗಿಸಿ ಅಕ್ರಮವಾಗಿ ಮಾದಕ ವಸ್ತು ಹಾಗೂ ಮನಿ ಲಾಂಡ್ರಿಂಗ್ ಪ್ರಕರಣಗಳಲ್ಲಿ ಬಳಕೆಯಾಗುತ್ತಿದೆ ಎಂದು ಬೆದರಿಸಿದ್ದಾರೆ.
4
+ ನಂತರ ನಿಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ತಿಳಿಸಿ ನೀವು ಈ ಕೂಡಲೇ ಮುಂಬೈ ಕ್ರೈಂಬ್ರಾಂಚ್‍ಗೆ ತನಿಖೆಗೆ ಖುದ್ದು ಬರಬೇಕಾಗುತ್ತದೆ ಅಥವಾ ವಿಡಿಯೋ ಕಾಲ್ ಮುಖಾಂತರ ತನಿಖೆಗೆ ಸಹಕರಿಸಬೇಕು ಇಲ್ಲವಾದಲ್ಲಿ ನಿಮ್ಮನ್ನು ತಕ್ಷಣ ಬಂಧಿಸಲಾಗುವುದು ಎಂದು ವಂಚಕರು ತಿಳಿಸಿದ್ದಾರೆ.
5
+ ಕರೆ ಮಾಡುವ ವ್ಯಕ್ತಿಯು ತಾನು ಪೊಲೀಸ್ ಇಲಾಖೆ, ಎನ್‍ಸಿಬಿ, ಸಿಬಿಐ, ಇಡಿ ಹಾಗೂ ಆರ್‍ಬಿಐ ಸಂಸ್ಥೆಗಳ ಹೆಸರುಗಳನ್ನು ತಿಳಿಸಿ ಸಾರ್ವಜನಿಕರನ್ನು ಭಯಭೀತರನ್ನಾಗಿಸುತ್ತಿದ್ದರು. ನಂತರ ಇದೇ ವಿಚಾರವಾಗಿ ಸಾರ್ವಜನಿಕರ ಬ್ಯಾಂಕ್ ಖಾತೆಗಳಿಂದ ಲಕ್ಷಾಂತರ ಹಣವನ್ನು ಆನ್‍ಲೈನ್ ಮುಖಾಂತರ ಅವರುಗಳ ಬ್ಯಾಂಕ್ ಖಾತೆಗಳಿಗೆ ಹಣವನ್ನು ಹಾಕಿಸಿಕೊಳ್ಳುತ್ತಿದ್ದರು.
6
+ ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್
7
+ ಈ ಕುರಿತು ಹಲವು ಪ್ರಕರಣಗಳು ದಾಖಲಾಗಿದ್ದವು. ಈ ರೀತಿ ಮೋಸ ಮಾಡುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲು ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಮಾರ್ಗದರ್ಶನದ ಮೇರೆಗೆ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡದ ಉಸ್ತುವಾರಿಯನ್ನು ಸಂಚಾರ ಪೂರ್ವ ವಿಭಾಗ(ಸಂಚಾರ)ದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಅವರನ್ನೊಳಗೊಂಡ ಅಕಾರಿಗಳು ಮತ್ತು ಸಿಬ್ಬಂದಿ ತನಿಖೆ ಕೈಗೊಂಡು ವಂಚಕರ ಬಗ್ಗೆ ಹಲವು ಮಾಹಿತಿಗಳನ್ನು ಕಲೆ ಹಾಕಿ ಕೇರಳ ರಾಜ್ಯದ ಮಲ್ಲಪುರಂ ಮತ್ತು ಕೋಜಿಕೋಡ್, ಗುಜರಾತ್ ರಾಜ್ಯದ ರಾಜ್‍ಕೋಟ್ ಮತ್ತು ಅಹಮದಾಬಾದ್ ಹಾಗೂ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ 14 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
8
+ ಈ ತಂಡವು ಭಾ���ತ ಸರ್ಕಾರದ ಎನ್‍ಸಿಆರ್‍ಪಿ ತುರ್ತು ಸೇವೆಯ ನಂಬರ್ 1930 ಪೋರ್ಟಲ್ ರಿಜಿಸ್ಟರ್‍ನಲ್ಲಿ ದೇಶಾದ್ಯಂತ ದಾಖಲಾಗಿರುವ ಒಟ್ಟು 546 ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿದೆ. ವಶಕ್ಕೆ ಪಡೆದ 14 ಮಂದಿ ವಂಚಕರಿಂದ ನಗರದ ಆರು ಪ್ರಕರಣಗಳು ಪತ್ತೆಯಾಗಿರುತ್ತವೆ.