CoolCoder44 commited on
Commit
a7412d1
·
verified ·
1 Parent(s): 4e9c056

868df5c57e7e971b60f873b5b994ba53edb2f4dc1a74d84d7985aca547a14453

Browse files
Files changed (50) hide show
  1. eesanje/url_46_88_4.txt +7 -0
  2. eesanje/url_46_88_5.txt +6 -0
  3. eesanje/url_46_88_6.txt +7 -0
  4. eesanje/url_46_88_7.txt +7 -0
  5. eesanje/url_46_88_8.txt +10 -0
  6. eesanje/url_46_88_9.txt +13 -0
  7. eesanje/url_46_89_1.txt +7 -0
  8. eesanje/url_46_89_10.txt +7 -0
  9. eesanje/url_46_89_11.txt +5 -0
  10. eesanje/url_46_89_12.txt +10 -0
  11. eesanje/url_46_89_2.txt +6 -0
  12. eesanje/url_46_89_3.txt +8 -0
  13. eesanje/url_46_89_4.txt +6 -0
  14. eesanje/url_46_89_5.txt +5 -0
  15. eesanje/url_46_89_6.txt +8 -0
  16. eesanje/url_46_89_7.txt +4 -0
  17. eesanje/url_46_89_8.txt +7 -0
  18. eesanje/url_46_89_9.txt +8 -0
  19. eesanje/url_46_8_1.txt +13 -0
  20. eesanje/url_46_8_10.txt +5 -0
  21. eesanje/url_46_8_11.txt +7 -0
  22. eesanje/url_46_8_12.txt +4 -0
  23. eesanje/url_46_8_2.txt +13 -0
  24. eesanje/url_46_8_3.txt +7 -0
  25. eesanje/url_46_8_4.txt +10 -0
  26. eesanje/url_46_8_5.txt +8 -0
  27. eesanje/url_46_8_6.txt +4 -0
  28. eesanje/url_46_8_7.txt +9 -0
  29. eesanje/url_46_8_8.txt +9 -0
  30. eesanje/url_46_8_9.txt +4 -0
  31. eesanje/url_46_90_1.txt +7 -0
  32. eesanje/url_46_90_10.txt +7 -0
  33. eesanje/url_46_90_11.txt +10 -0
  34. eesanje/url_46_90_12.txt +9 -0
  35. eesanje/url_46_90_2.txt +11 -0
  36. eesanje/url_46_90_3.txt +5 -0
  37. eesanje/url_46_90_4.txt +5 -0
  38. eesanje/url_46_90_5.txt +12 -0
  39. eesanje/url_46_90_6.txt +11 -0
  40. eesanje/url_46_90_7.txt +8 -0
  41. eesanje/url_46_90_8.txt +6 -0
  42. eesanje/url_46_90_9.txt +4 -0
  43. eesanje/url_46_91_1.txt +12 -0
  44. eesanje/url_46_91_10.txt +9 -0
  45. eesanje/url_46_91_11.txt +9 -0
  46. eesanje/url_46_91_12.txt +18 -0
  47. eesanje/url_46_91_2.txt +7 -0
  48. eesanje/url_46_91_3.txt +13 -0
  49. eesanje/url_46_91_4.txt +7 -0
  50. eesanje/url_46_91_5.txt +6 -0
eesanje/url_46_88_4.txt ADDED
@@ -0,0 +1,7 @@
 
 
 
 
 
 
 
 
1
+ 3 ಕ್ಷೇತ್ರಗಳ ಉಪಚುನಾವಣೆ : ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ ತಂಡ ರಚನೆ
2
+ ಬೆಂಗಳೂರು,ಜು.5-ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ ತಂಡ ರಚನೆ ಮಾಡಲಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್‌‍.ಅಶ್ವತ್ನಾರಾಯಣ, ಸಂಡೂರಿಗೆ ಸಿ.ಟಿ.ರವಿ, ಶಿಗ್ಗಾವಿಗೆ ಆರ್‌.ಅಶೋಕ್‌ ನೇತೃತ್ವದ ತಂಡಗಳನ್ನು ರಚನೆ ಮಾಡಲಾಗಿದೆ.
3
+ ಕ್ಷೇತ್ರಗಳಿಗೆ ತೆರಳಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ. ವರದಿಗಳು ಪೂರ್ಣಗೊಂಡ ಬಳಿಕ ಹೈಕಮಾಂಡ್‌ಗೆ ಕಳಿಸಲು ಬಿಜೆಪಿ ನಿರ್ಧಾರ ಮಾಡಿದೆ.
4
+ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
5
+ 2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮಾಯಿ ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
6
+ ಚನ್ನಪಟ್ಟಣದಿಂದ ಜೆಡಿಎಸ್‌‍ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.
7
+ ಸಂಡೂರು ಕಾಂಗ್ರೆಸ್‌‍ ಶಾಸಕರಾಗಿದ್ದ ಇ.ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
eesanje/url_46_88_5.txt ADDED
@@ -0,0 +1,6 @@
 
 
 
 
 
 
 
1
+ ಹಾಸನದಲ್ಲಿ ಶಂಕಿತ ಡೆಂಘೀಗೆ ಮತ್ತೊಬ್ಬ ಬಾಲಕಿ ಬಲಿ, ಒಂದೇ ವಾರದಲ್ಲಿ ನಾಲ್ವರು ಬಾಲಕಿಯರ ಸಾವು
2
+ ಹಾಸನ,ಜು.5-ರಾಜ್ಯಾದ್ಯಂತ ಮಹಮಾರಿ ಡೆಂಘೀ ರಣಕೇಕೆ ಮುಂದುವರೆದಿದ್ದು, ಹಾಸನದಲ್ಲಿ ಮತ್ತೊಂದು ಬಾಲಕಿ ಶಂಕಿತ ಡೆಂಘೀಗೆ ಬಲಿಯಾಗಿದ್ದಾಳೆ.ಸಮೃದ್ಧಿ(8) ಮೃತಪಟ್ಟ ಬಾಲಕಿ. ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಹಳ್ಳಿ ಗ್ರಾಮದ ರಮೇಶ್‌ ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿಗೆ ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಮೂರು ದಿನದ ಹಿಂದೆ ಹಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿತ್ತು.
3
+ ಚೇತರಿಸಿಕೊಳ್ಳದ ಹಿನ್ನಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ಬಾಲಕಿಯನ್ನು ವರ್ಗಾಯಿಸಲಾಗಿತ್ತು. ಆದರೆ ಅಲ್ಲೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಮೃತಪಟ್ಟಿದ್ದಾಳೆ.
4
+ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಶಂಕಿತ ಡೆಂಘೀಗೆ ನಾಲ್ವರು ಬಾಲಕಿಯರು ಬಲಿಯಾಗಿದ್ದು, ಜಿಲ್ಲೆಯ ಜನತೆಯಲ್ಲಿ ಭಾರೀ ಆತಂಕ ಉಂಟು ಮಾಡಿದೆ. ಅದರಲ್ಲೂ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮೂವರು ಮೃತಪಟ್ಟಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ. ಮಹಾಮಾರಿ ಡೆಂಘೀಗೆ ಹಾಸನ ಜಿಲ್ಲೆಯ ಜನತೆ ನಲುಗಿ ಹೋಗಿದ್ದು, ಪ್ರತಿಕ್ಷಣ ಆತಂಕದಲ್ಲೇ ದಿನ ಕಳೆಯುತ್ತಿದ್ದಾರೆ.
5
+ ಹುಣಸೂರು ವರದಿ:ಸಾಂಕ್ರಾಮಿಕ ರೋಗಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಡೆಂಘೀಗೆ ಬಲಿಯಾಗಿದ್ದಾರೆ.ಹುಣಸೂರು ತಾಲ್ಲೂಕಿನ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಗೇಂದ್ರ ಎಂಬುವರು ಕಾರ್ಯ ನಿರ್ವಹಿಸುತ್ತಿದ್ದು, ತಾಲ್ಲೂಕಿನಾದ್ಯಂತ ಡೆಂಘೀ ವಿರುದ್ಧ ಜಾಗೃತಿ ಮೂಡಿಸುತ್ತಿದ್ದರು. ಇದೀಗ ಅವರೇ ಡೆಂಘೀಗೆ ಬಲಿಯಾಗಿದ್ದಾರೆ.
6
+ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಮೈಸೂರು, ಧಾರವಾಡ, ದಕ್ಷಿಣ ಕನ್ನಡ, ವಿಜಯಪುರ, ಉಡುಪಿ, ಬೆಳಗಾವಿ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಶಂಕಿತ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಶಿಸ್ತು ಕ್ರಮ ತೆಗೆದುಕೊಂಡಿದೆ.
eesanje/url_46_88_6.txt ADDED
@@ -0,0 +1,7 @@
 
 
 
 
 
 
 
 
1
+ ಬೆಂಗಳೂರು-ತುಮಕೂರು-ಅರಸೀಕೆರೆ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ, ಹೆಚ್ಚುವರಿ ಬೋಗಿ ಅಳವಡಿಸಲು ಒತ್ತಾಯ
2
+ ತುಮಕೂರು, ಜು.5-ಬೆಂಗಳೂರಿನಿಂದ ತುಮಕೂರು, ಅರಸೀಕೆರೆ ಕಡೆಗೆ ಸಂಜೆ ವೇಳೆ ಚಲಿಸುವ ವಿಶೇಷ ಪ್ಯಾಸೆಂಜರ್‌ ಹಾಗೂ ಗೋಲ್ಗುಂಬಸ್‌ ರೈಲುಗಳಲ್ಲಿ ನಿಲ್ಲಲು ಜಾಗವಿಲ್ಲದೆ ಪ್ರಯಾಣಿಕರು ಹೈರಾಣಾಗುತ್ತಿದ್ದು, ಹೆಚ್ಚುವರಿ ಜನರಲ್‌ ಬೋಗಿಗಳು ಅಥವಾ ಹೆಚ್ಚುವರಿ ರೈಲನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರನ್ನು ಪ್ರಯಾಣಿಕರು ಒತ್ತಾಯಿಸಿದ್ದಾರೆ.
3
+ ಪ್ರತಿನಿತ್ಯ ರಾಜಧಾನಿ ಬೆಂಗಳೂರಿಗೆ ಅರಸೀಕೆರೆ, ತಿಪಟೂರು, ಗುಬ್ಬಿ, ತುಮಕೂರು ಸೇರಿದಂತೆ ಈ ಭಾಗದ ವಿವಿಧೆಡೆಗಳಿಂದ ಸಾವಿರಾರು ಮಂದಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ, ಬ್ಯುಸಿನೆಸ್‌ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ರೈಲಿನಲ್ಲಿ ಪ್ರಯಾಣ ಸುತ್ತಾರೆ.ಕೆಲ ಎಕ್ಸ್ ಪ್ರೆಸ್‌ ರೈಲುಗಳು ನಿರ್ದಿಷ್ಟ ನಿಲ್ದಾಣಗಳಲ್ಲಿ ನಿಲುಗಡೆ ಮಾಡುವುದನ್ನು ಬಿಟ್ಟರೆ ಉಳಿದೆಡೆ ನಿಲ್ಲಿಸುವುದಿಲ್ಲ. ಹಾಗಾಗಿ ಪ್ಯಾಸೆಂಜರ್‌ ರೈಲಿಗೆ ಬಹಳ ಬೇಡಿಕೆ ಇದೆ.
4
+ ಈ ಪ್ಯಾಸೆಂಜರ್‌ ರೈಲಿನಲ್ಲಿ ನಿತ್ಯ ಸಾವಿರಾರು ಪ್ರಯಾಣಿಕರು ಪ್ರಯಾಣಿಸುತ್ತಾರೆ. ಆದರೆ ಈ ರೈಲಿನ ಬೋಗಿಗಳಲ್ಲಿ ಜನ ನಿಲ್ಲಲು ಜಾಗ ಇಲ್ಲದಷ್ಟರ ಮಟ್ಟಿಗೆ ಪ್ರಯಾಣಿಕರು ತುಂಬಿರುತ್ತಾರೆ. ಒಮ್ಮೊಮ್ಮೆ ಬೋಗಿಗಳಲ್ಲಿ ಉಸಿರಾಡಲು ಸಹ ಜಾಗ ಇರುವುದಿಲ್ಲ. ಉಸಿರುಗಟ್ಟಿ ಪ್ರಯಾಣಿಸಬೇಕಾದ ವಾತಾವರಣ ಸೃಷ್ಟಿಯಾಗಿರುತ್ತದೆ.
5
+ ಅದರಲ್ಲೂ ಬೆಳಿಗ್ಗೆ ಮತ್ತು ಸಂಜೆ ವೇಳೆ ವೃದ್ಧರು, ಮಕ್ಕಳು, ಮಹಿಳೆಯರು ರೈಲುಗಾಡಿಗಳಲ್ಲಿ ಪ್ರಯಾಣಿಸುವುದು ಬಹಳ ದುಸ್ತರವಾಗಿದೆ. ಹಾಗಾಗಿ ಈ ಬಗ್ಗೆ ರೈಲ್ವೆ ಅಧಿ ಕಾರಿಗಳು ಹಾಗೂ ಸಚಿವ ವಿ.ಸೋಮಣ್ಣ ಅವರು ಗಮನ ಹರಿಸಿ ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಹೆಚ್ಚುವರಿ ರೈಲುಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಮನವಿ ಮಾಡಿದ್ದಾರೆ.
6
+ ಗೋಲ್ಗುಂಬಸ್‌ ರೈಲಿನಲ್ಲಿ ಎರಡು ಅಥವಾ ಮೂರು ಮಾತ್ರ ಜನರಲ್‌ ಬೋಗಿಗಳು ಇರುತ್ತವೆ. ಉಳಿದಂತೆ ರಿಸರ್ವ್‌ ಬೋಗಿಗಳು ಇವೆ. ಇದರಿಂದಾಗಿ ಪಾಸ್‌ ಹೊಂದಿರುವವರು ಹಾಗೂ ಟಿಕೆಟ್‌ ಪಡೆದು ಪ್ರಯಾಣಿಸುವವರಿಗೆ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ.
7
+ ಗೋಲ್ಗುಂಬಸ್‌ ರೈಲಿನಲ್ಲಿ ಹೆಚ್ಚುವರಿ ಜನರಲ್‌ ಬೋಗಿಗಳನ್ನು ಅಳಪಡಿಸಿದರೆ ಪ್ರತಿನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಲಿದೆ. ಈ ಬಗ್ಗೆಯೂ ಸಚಿವರು ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಮನವಿ ಮಾಡಿದ್ದಾರೆ.
eesanje/url_46_88_7.txt ADDED
@@ -0,0 +1,7 @@
 
 
 
 
 
 
 
 
1
+ ಡಿಸಿಎಂ ಆಗುವ ಆಸೆ ನನಗಿಲ್ಲ : ಕೆ.ಜೆ.ಜಾರ್ಜ್
2
+ ಬೆಂಗಳೂರು,ಜು.4-ಕೊಟ್ಟ ಕೆಲಸವನ್ನೇ ಸರಿಯಾಗಿ ಮಾಡಿದರೆ ಸಾಕು. ಉಪಮುಖ್ಯಮಂತ್ರಿಯಾಗುವ ಯಾವ ಆಸೆಯೂ ತಮಗಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1969 ರಲ್ಲಿ ರಾಜಕೀಯಕ್ಕೆ ಬಂದವನು.
3
+ ನೀವು ರಾಜಕೀಯಕ್ಕೆ ಬಂದು ದೇಶ ಉದ್ಧಾರ ಮಾಡಬೇಕೆಂದು ನನಗೆ ಯಾರೂ ಹೇಳಲಿಲ್ಲ. ಸಮಾಜಸೇವೆ ಮಾಡುವ ಆಸಕ್ತಿಯಿಂದ ರಾಜಕಾರಣಕ್ಕೆ ಬಂದೆ. ಶಾಸಕನಾಗುತ್ತೇನೆ ಎಂದುಕೊಂಡಿರಲಿಲ್ಲ. ಪಕ್ಷ ತನ್ನನ್ನು ಗುರುತಿಸಿ, ಸಚಿವನನ್ನಾಗಿ ಮಾಡಿದೆ ಎಂದರು.
4
+ ಹಿರಿತನದ ಆಧಾರದ ಮೇಲೆ ಅವಕಾಶ ನೀಡುವುದು, ಬಿಡುವುದು ಹೈಕಮಾಂಡ್ ಅಥವಾ ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ನನಗೆ ಆ ಹುದ್ದೆಗಳ ಮೇಲೆ ಆಸಕ್ತಿಯಿಲ್ಲ. ಈಗಾಗಲೇ ಉತ್ತಮವಾದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇದ್ದಾರೆ. ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸುವ ಅಗತ್ಯವಿಲ್ಲ. ಆದರೂ ಅದರ ವಿಚಾರವಾಗಿ ಕ್ರಮ ಕೈಗೊಳ್ಳಬೇಕಾಗಿರುವುದು ಮುಖ್ಯಮಂತ್ರಿಯವರ ಅಧಿಕಾರ ಎಂದು ಹೇಳಿದರು.
5
+ ಮುಡಾ ನಿವೇಶನ ಹಂಚಿಕೆ ಪ್ರಕರಣ ನಡೆದಿರುವುದು ಬಿಜೆಪಿಯವರ ಕಾಲದಲ್ಲಿ. ಡಿ ನೋಟಿಫಿಕೇಶನ್ ಆಗಿದ್ದ ಜಾಗವನ್ನು ಮೈಸೂರು ನಗರಾಭಿವೃದ್ಧಿ ಯಾವ ರೀತಿ ನಿವೇಶನ ಮಾಡಲು ಸಾಧ್ಯ?, ವಿರೋಧಪಕ್ಷಗಳಿಗೆ ಬೇರೆ ವಿಚಾರಗಳಿಲ್ಲ. ಹಾಗಾಗಿ ಇಂತಹ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು.
6
+ ಈಗಾಗಲೇ ಪ್ರಕರಣದ ವಿಚಾರಣೆ ನಡೆಯುತ್ತಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.ಬಿಜೆಪಿಯವರು ಪ್ರತಿಯೊಂದು ಪ್ರಕರಣವನ್ನೂ ಸಿಬಿಐ ತನಿಖೆಗೆ ಕೇಳುತ್ತಿದ್ದಾರೆ. ಈ ಹಿಂದೆ ಐಎಎಸ್ ಅ„ಕಾರಿ ಡಿ.ಕೆ.ರವಿ, ಡಿವೈಎಸ್ಪಿ ಗಣಪತಿ ಪ್ರಕರಣಗಳನ್ನು ಸಿಬಿಐಗೆ ನೀಡಲಾಯಿತು.ಫಲಿತಾಂಶಗಳೇನು ಎಂದು ಪ್ರಶ್ನಿಸಿದರು.
7
+ ನಮ್ಮಲ್ಲಿ ಒಳ್ಳೆಯ ಅಧಿಕಾರಿಗಳಿದ್ದಾರೆ. ಸಿಬಿಐಗೆ ನೀಡುವ ಅಗತ್ಯವಿಲ್ಲ ಎಂದರು.ತಾವು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದು, ಮುಡಾದಿಂದ ನಿವೇಶನ ಹಂಚಿಕೆಯಲ್ಲಿ ಯಾವುದೇ ಲೋಪಗಳಾಗಿಲ್ಲ ಎಂದು ಸಮರ್ಥಿಸಿಕೊಂಡರು.
eesanje/url_46_88_8.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಹಿರಿಯ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಮುಡಾ ಹಗರಣದ ತನಿಖೆ
2
+ ಬೆಂಗಳೂರು,ಜು.4-ಮುಡಾದಿಂದ ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯಸರ್ಕಾರ ಮುಂದಾಗಿದ್ದು, ಈಗಾಗಲೇ ಹಂಚಿಕೆ ಮಾಡಲಾಗಿದ್ದ ನಿವೇಶನಗಳನ್ನು ಹಿಂಪಡೆಯಲಾಗಿದೆ.
3
+ ಜಿಲ್ಲಾಧಿಕಾರಿಯವರಿಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಹೆಚ್ಚುವರಿ ತನಿಖೆಗೆ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಲು ಚಿಂತನೆ ನಡೆದಿದೆ.ವಿಶೇಷ ತನಿಖೆ ಅಥವಾ ಸಿಐಡಿ ವಿಚಾರಣೆಗೆ ಸಲಹೆಗಳು ಕೇಳಿಬಂದಿವೆ. ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲಾಧಿಕಾರಿ ವರದಿ ಮತ್ತು ಹಿರಿಯ ಐಎಎಸ್ ಅಧಿಕಾರಿಯ ತನಿಖೆಯ ಬಳಿಕ ಪ್ರಕರಣದ ಹೆಚ್ಚುವರಿ ತನಿಖೆಗೆ ಆದೇಶಿಸುವ ಸಾಧ್ಯತೆಗಳಿವೆ.
4
+ ನಿವೇಶನ ಹಂಚಿಕೆಗೆ ಸಂಬಂಧಪಟ್ಟಂತೆ ಮುಡಾ ಆಯುಕ್ತರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಎಲ್ಲೆಲ್ಲಿ ಕರ್ತವ್ಯ ಲೋಪಗಳಾಗಿವೆ?, ಕಾನೂನು ಉಲ್ಲಂಘನೆಯ ಅಂಶಗಳೇನು? ಎಂಬೆಲ್ಲಾ ವಿಚಾರಗಳನ್ನು ಪರಿಶೀಲಿಸಲಾಗುತ್ತಿದ್ದು, ಅವ್ಯವಹಾರಗಳು ಕಂಡುಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.
5
+ ಹೊಸ ಬೆಳವಣಿಗೆ ಎಂಬಂತೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟ್ರೊನೊಲಾಜಿಯಾ ದಾಖಲಾತಿಗಳು ಬಿಡುಗಡೆಯಾಗಿದ್ದು, ಜಿಲ್ಲಾಧಿಕಾರಿಯವರ ವಿಸ್ತೃತವಾದ ಪತ್ರ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.
6
+ ಮೈಸೂರಿನ ದೇವನೂರು ಮೂರನೇ ಹಂತದ ಬಡಾವಣೆಗಾಗಿ ಕೆಸರೆ ಗ್ರಾಮದಲ್ಲಿ ಶ್ರೀನಿಂಗ ಅವರ ಹೆಸರಿನಲ್ಲಿದ್ದ 3.16 ಎಕರೆಯನ್ನು ಭೂಸ್ವಾಧೀನಪಡಿಸಿಕೊಳ್ಳಲು 1992 ರಲ್ಲಿ ಅಧಿಸೂಚನೆ ಹೊರಡಿಸಲಾ ಗಿತ್ತು. 1998 ರಲ್ಲಿ ಅಂತಿಮ ಅಧಿಸೂಚನೆ ಪ್ರಕಟವಾಗಿದ್ದು, 1998 ರಲ್ಲಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.
7
+ 2004 ರಲ್ಲಿ ಮಲ್ಲಿಕಾರ್ಜುನ ಸ್ವಾಮಿ ಎಂಬುವರು ಈ ಭೂಮಿಯನ್ನು ಕ್ರಯಕ್ಕೆ ಪಡೆದಿರುತ್ತಾರೆ. 2005 ರಲ್ಲಿ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆಯಾಗಿದೆ. 2010 ರಲ್ಲಿ ಮಲ್ಲಿಕಾರ್ಜುನ ಸ್ವಾಮಿಯವರು ತಮ ತಂಗಿ ಪಾರ್ವತಿ ಅವರಿಗೆ ಭೂಮಿಯನ್ನು ದಾನ ಮಾಡಿದ್ದರು. ಅದರಂತೆ ದಾಖಲಾತಿಗಳು ಬದಲಾಗಿವೆ.
8
+ 2014 ರಲ್ಲಿ ಪಾರ್ವತಿ ಅವರು ಮನವಿ ಸಲ್ಲಿಸಿದ್ದು, ಪ್ರಾಧಿಕಾರವು ಉಪಯೋಗಿಸಿಕೊಂಡಿರುವ ಭೂಮಿಗೆ ಪರಿಹಾರ ನೀಡುವಂತೆ ವಿನಂತಿಸಿದ್ದಾರೆ. 2017 ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂಮಿ ಬಳಕೆ ಮಾಡಿಕೊಂಡಿರುವು ತಪ್ಪಾಗಿದ್ದು, ಪರಿಹಾರ ರೂಪದಲ್ಲಿ ಬದಲಿ ನಿವೇಶನವನ್ನು ಶೇ. 50 ರ ಅನುಪಾತದಲ್ಲಿ ನೀಡಲು ಕ್ರಮ ಕೈಗೊಳ್ಳಲಾಗಿರುತ್ತದೆ. ಈ ಎಲ್ಲಾ ವಿಚಾರಗಳಿಗೂ ದಾಖಲಾತಿಗಳು ಲಭ್ಯವಿದ್ದು, ಅದರ ಪರಿಶೀಲನೆಗಳು ನಡೆಯುತ್ತಿವೆ.
9
+ ವಿವಾದ ಕಾವೇರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಚಿಕೆಯಾಗಿದ್�� ಪರ್ಯಾಯ ನಿವೇಶನಗಳನ್ನು ಹಿಂಪಡೆಯಲು ಆದೇಶಿಸಿದ್ದಾರೆ. ಜೊತೆಯಲ್ಲಿ ಮುಡಾ ಆಯುಕ್ತರನ್ನು ಅಮಾನತುಗೊಳಿಸಿದ್ದಾರೆ.
10
+ ಪ್ರಾಧಿಕಾರದಿಂದ ಇದೇ ರೀತಿ ಬೇರೆಬೇರೆ ನಿವೇಶನಗಳ ಹಂಚಿಕೆಯನ್ನು ಪರಿಶೀಲಿಸಲಾಗುತ್ತಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಹೋರಾಟ ನಡೆಸಲು ಮುಂದಾಗಿದೆ. ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಗುತ್ತಿದೆ. ಆದರೆ ಇದಕ್ಕೆ ಸೊಪ್ಪು ಹಾಕದ ಸಿದ್ದರಾಮಯ್ಯನವರು ರಾಜೀನಾಮೆಯನ್ನೂ ನೀಡುವುದಿಲ್ಲ, ಸಿಬಿಐಗೂ ವಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
eesanje/url_46_88_9.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ವಾಹನಗಳಲ್ಲಿ ತೀಕ್ಷ್ಣ ಎಲ್ಇಡಿ ಲೈಟ್ ಅಳವಡಿಸಿಕೊಂಡವರಿಗೆ ಬಿಸಿ ಮುಟ್ಟಿಸಿದ ಪೊಲೀಸ್
2
+ ಬೆಂಗಳೂರು, ಜು.4-ರಾಜ್ಯ ಸಂಚಾರಿ ಪೊಲೀಸರು ಇದೀಗ ವಾಹನಗಳಲ್ಲಿ ಕಣ್ಣು ಕುಕ್ಕುವಂತಹ ಎಲ್ಇಡಿ ಲೈಟ್ಗಳನ್ನು ಅಳವಡಿಸಿ ಕೊಂಡು ಇತರರಿಗೆ ತೊಂದರೆ ಉಂಟು ಮಾಡುವರ ವಿರುದ್ಧ ಬಿಸಿ ಮುಟ್ಟಿಸಿದ್ದು, ಈವರೆಗೆ 1518 ಪ್ರಕರಣಗಳು ದಾಖಲಾಗಿವೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಮಹಾಪೊಲೀಸ್ ನಿರ್ದೇಶಕರಾದ ಅಲೋಕ್ ಕುಮಾರ್ ತಿಳಿಸಿದ್ದಾರೆ.
3
+ ಈ ಬಗ್ಗೆ ಅವರು ಎಕ್‌್ಸನಲ್ಲಿ ಪ್ರಕಟಿಸಿದ್ದು, ಜುಲೈ ತಿಂಗಳಿನಿಂದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಎಲ್ಇಡಿ ಲೈಟ್ ಅಳವಡಿಸಿ ಕೊಳ್ಳುವ ವಾಹನ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
4
+ ಬೆಂಗಳೂರಿನಲ್ಲಿ ಅತಿ ಹೆಚ್ಚು:ವಾಹನಗಳಿಗೆ ತೀಕ್ಷ್ಣ ಬೆಳಕು ಬಿಂಬಿಸುವಂತಹ ಎಲ್ಇಡಿ ಲೈಟ್ಗಳನ್ನು ಅಳವಡಿಸಿದ ಅತಿ ಹೆಚ್ಚು ಪ್ರಕರಣಗಳು ನಗರದಲ್ಲಿ ವರದಿಯಾಗಿವೆ. ಈ ಬಗ್ಗೆ 686 ಪ್ರಕರಣಗಳು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.ನಂತರದ ಸ್ಥಾನದಲ್ಲಿ ಮಂಗಳೂರು ನಗರ 96 ಪ್ರಕರಣ, ರಾಯಚೂರು 93 ಪ್ರಕರಣಗಳು ದಾಖಲಾಗಿದ್ದು, ಕೊಪ್ಪಳ, ಕೆಜಿಎಫ್, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.
5
+ ನಿನ್ನೆ ಸುಮಾರು 287 ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, 100ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿಕೊಂಡು 57,500 ದಂಡ ಸಂಗ್ರಹ ಮಾಡಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್.ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6
+ ರಸ್ತೆ ಅಪಘಾತಗಳು ಮತ್ತು ಅದರಿಂದಾಗಿ ಸಾವು- ನೋವುಗಳನ್ನು ತಪ್ಪಿಸಲು ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿ ಅನುಮತಿಸಲಾದ ಲೈಟ್ಗಳನ್ನು ಮಾತ್ರ ವಾಹನಗಳಲ್ಲಿ ಅಳವಡಿಸಬೇಕೆಂದು ರಾಜ್ಯ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು.
7
+ ವಾಹನಗಳಲ್ಲಿ ಕಣ್ಣು ಕುಕ್ಕುವಂತಹ ಲೈಟ್ಗಳನ್ನು ಬಳಸುತ್ತಿದ್ದರೆ, ಅಪಘಾತಗಳಿಗೆ ಕಾರಣವಾಗುತ್ತದೆ. ಅಲ್ಲದೆ, ಇತರೇ ಚಾಲಕರಿಗೆ ತೊಂದರೆ ಉಂಟಾಗುತ್ತದೆ.ಹಾಗಾಗಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.ಹೀಗಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್ ಕುಮಾರ್ ಅವರು ಎಚ್ಚರಿಸಿದ್ದಾರೆ.
8
+ ಕೇಂದ್ರ ಮೋಟಾರ್ ವಾಹನ ಕಾಯ್ದೆ ಉಲ್ಲಂಘಿಸಿ ತೀಕ್ಷ್ಣ ಬೆಳಕು ಸೂಸುವ ಎಲ್ಇಡಿ ಲೈಟ್ ಅಳವಡಿಸಿದ್ದ ಬಗ್ಗೆ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅವರು ವಂದನೆ ಸಲ್ಲಿಸಿದ್ದಾರೆ.
9
+ ಸಂಚಾರ ನಿಯಮ ಉಲ್ಲಂಘನೆ : 184 ಪ್ರಕರಣ- 90700 ರೂ. ದಂಡ ಸಂಗ್ರಹಬೆಂಗಳೂರು, ಜು.4- ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುತ್ತಿರುವುದರಿಂದ ರಸ್ತೆ ಅಪಘಾತಗಳು ಸಂಭವಿಸುತ್ತಿವೆ.���್ರಮುಖವಾಗಿ ದ್ವಿಚಕ್ರ ವಾಹನಗಳಲ್ಲಿ ಹೆಚ್ಚು ಅಪಘಾತವಾಗುತ್ತಿರುವುದರಿಂದ ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು 184 ಪ್ರಕರಣಗಳನ್ನು ದಾಖಲಿಸಿ 90,700 ರೂ. ದಂಡ ವಸೂಲಿ ಮಾಡಿದ್ದಾರೆ.
10
+ ಏಕಮುಖ ಸಂಚಾರಕ್ಕೆ ವಿರುದ್ಧ ದಿಕ್ಕಿನಲ್ಲಿ ಚಾಲನೆ ಮಾಡಿದ 55 ಪ್ರಕರಣದಲ್ಲಿ 27,600 ರೂ. ದಂಡ ವಸೂಲಿ ಮಾಡಲಾಗಿದ್ದು, ತಪ್ಪು ನಿಲುಗಡೆ 69 ಪ್ರಕರಣ- 37,800 ರೂ. ದಂಡ, ಟಾತ್ ಪಾರ್ಕಿಂಗ್ ವಾಹನ ಚಾಲನೆ 6 ಪ್ರಕರಣ- 5000 ರೂ. ದಂಡ. ಟ್ಪಾತ್ ರೈಡಿಂಗ್ 9 ಪ್ರಕರಣ- 5 ಸಾವಿರ ದಂಡ, ಮೊಬೈಲ್ ಬಳಸಿ ವಾಹನ ಚಾಲನೆ 7 ಪ್ರಕರಣ -10 ಸಾವಿರ ದಂಡ. ಹೆಲ್ಮೆಟ್ ಧರಿಸದೆ ವಾಹನ ಚಾಲನೆ 511 ಪ್ರಕರಣ- 2.51 ಲಕ್ಷ ದಂಡ, ತ್ರಿಬಲ್ ರೈಡಿಂಗ್ 10 ಪ್ರಕರಣ-6 ಸಾವಿರ ದಂಡ ಹಾಗೂ ಇತರೆ ಸಂಚಾರಿ ನಿಯಮ ಉಲ್ಲಂಸಿದ 184 ಪ್ರಕರಣದಲ್ಲಿ 90700 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪಶ್ಚಿಮ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಅನಿತಾ ಬಿ.ಹದ್ದಣ್ಣನವರ್ ತಿಳಿಸಿದ್ದಾರೆ.
11
+ ಸುಮಾರು 851 ಪ್ರಕರಣಗಳಲ್ಲಿ ಒಟ್ಟು 4,33,600 ರೂ. ದಂಡ ಸಂಗ್ರಹಿಸಲಾಗಿದೆ. ಜೊತೆಗೆ ಎಲ್ಲ ವಾಹನ ಚಾಲಕರು, ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಗಳನ್ನು ಪಾಲಿಸುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಮುಂದಿನ ದಿನಗಳಲ್ಲಿಯೂ ಸಹ ವಿಶೇಷ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
12
+ ಹೈಬೀಮ್ಲೈಟ್:ಇತ್ತೀಚಿನ ದಿನಗಳಲ್ಲಿ ಕೆಲವು ವಾಹನಗಳಲ್ಲಿ ಹೈಬೀಮ್ ಲೈಟ್ ಉಪಯೋಗಿಸುತ್ತಿದ್ದು, ಅಂತಹ ವಾಹನಗಳ ಸವಾರರ ವಿರುದ್ಧ 77 ಪ್ರಕರಣಗಳನ್ನು ದಾಖಲಿಸಿ 38500 ರೂ. ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ.
13
+ ಹೈಬೀಮ್ಲೈಟ್ ಉಪಯೋ ಗಿಸುವುದರಿಂದ ರಾತ್ರಿ ಸಮಯದಲ್ಲಿ ರಸ್ತೆ ಅಪಘಾತಗಳು ಉಂಟಾಗುವ ಸಂಭವವಿರುತ್ತದೆ. ಹಾಗಾಗಿ ಪಶ್ಚಿಮ ವಿಭಾಗದ ಎಲ್ಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಚರಣೆ ಕೈಗೊಳ್ಳಲಾಗಿದೆ. ಎಲ್ಲಾ ವಾಹನ ಚಾಲಕರು ಹಾಗೂ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಿಕೊಂಡು ನಿಯಮಗಳನ್ನು ಪಾಲಿಸುವಂತೆ ಡಿಸಿಪಿ ಅವರು ಮನವಿ ಮಾಡಿದ್ದಾರೆ.
eesanje/url_46_89_1.txt ADDED
@@ -0,0 +1,7 @@
 
 
 
 
 
 
 
 
1
+ ಗ್ರಾಮೀಣ ಪ್ರದೇಶದಲ್ಲಿ ‘ಅರಳೀಕಟ್ಟೆ ಮಾದರಿ ನ್ಯಾಯಾಲಯ’ಗಳ ಸ್ಥಾಪನೆಗೆ ಮುಂದಾದ ಸರ್ಕಾರ
2
+ ಬೆಂಗಳೂರು,ಜು.4-ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ನ್ಯಾಯ ದೊರೆಯಬೇಕು. ಅದಕ್ಕಾಗಿ ಮುಂದಿನ ಅರಳೀಕಟ್ಟೆ ಮಾದರಿಯಲ್ಲಿ ನ್ಯಾಯಾಲಯಗಳನ್ನು ಸ್ಥಾಪಿಸಿ ಅದಕ್ಕೆ ನ್ಯಾಯಾಧೀಶರೇ ಅಧ್ಯಕ್ಷತೆ ವಹಿಸುವಂತಹ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ನೂತನ ನೀತಿಯ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
3
+ ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ನ್ಯಾಯ ಸಿಗಬೇಕು ಎಂಬ ಪರಿಕಲ್ಪನೆಯಡಿ ನೂತನ ನ್ಯಾಯ ನೀತಿಯನ್ನು ರೂಪಿಸಲಾಗುತ್ತಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ತಂದಿದ್ದರು ಎಂದು ಹೇಳಿದರು.
4
+ ಗ್ರಾಮೀಣ ಭಾಗದ ಜನರಿಗೆ ಗ್ರಾಮಮಟ್ಟದಲ್ಲೇ ನ್ಯಾಯ ಸಿಗಬೇಕು. ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದ್ದ ಅರಳೀಕಟ್ಟೆ ನ್ಯಾಯ ಪಂಚಾಯಿತಿಗಳನ್ನು ಈಗ ಉತ್ತಮಗೊಳಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ತಾಲ್ಲೂಕು ಮಟ್ಟದ ನ್ಯಾಯಾಧೀಶರು ಸ್ಥಳೀಯ ನ್ಯಾಯ ಪಂಚಾಯಿತಿಗಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು.
5
+ ಕೇಂದ್ರ ಸರ್ಕಾರ ಜು.1 ರಿಂದ ಜಾರಿಗೆ ತಂದಿರುವ ನೂತನ ಅಪರಾಧ ಕಾನೂನುಗಳ ಕುರಿತಂತೆ ಆಕ್ಷೇಪಣೆಗಳಿದ್ದರೆ ಕೇಂದ್ರಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಹೇಳಿದರು.ಮೈಸೂರಿನ ಮುಡಾ ಪ್ರಕರಣದ ಪರಿಶೀಲನೆ ನಡೆಯುತ್ತಿದೆ. ಈಗಾಗಲೇ ಮುಖ್ಯಮಂತ್ರಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
6
+ ಬಿಜೆಪಿಯವರು ಕೇಳುವಂತೆ ಎಲ್ಲಾ ಪ್ರಕರಣಗಳನ್ನೂ ಸಿಬಿಐಗೆ ಕೊಟ್ಟರೆ ಸ್ಥಳೀಯ ಪೊಲೀಸರಿಗೆ ಕೆಲಸವೇ ಇಲ್ಲದಂತಾಗುತ್ತದೆ ಎಂದು ಹೇಳಿದರು.ವಿಧಾನಮಂಡಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಯಾವ ವಿಚಾರವನ್ನು ಚರ್ಚೆಗೆ ಕೈಗೆತ್ತಿಕೊಳ್ಳುತ್ತಾರೋ ಗೊತ್ತಿಲ್ಲ. ಸ್ಪೀಕರ್‌ ಅನುಮತಿ ಪಡೆದು ಯಾವುದೇ ವಿಷಯವನ್ನು ಪ್ರಸ್ತಾಪಿಸಿದರೂ ಸರ್ಕಾರ ಸಮರ್ಥ ಉತ್ತರ ನೀಡಲಿದೆ ಎಂದರು.
7
+ ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಚರ್ಚೆಯಿಂದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೇಸರವಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ. ದೆಹಲಿಯಲ್ಲಿ ತಾವು ಅವರನ್ನು ಭೇಟಿ ಮಾಡಿದ್ದು, ಆ ವೇಳೆ ಅವರು ಬೇಸರದ ಯಾವ ವಿಚಾರಗಳನ್ನೂ ಪ್ರಸ್ತಾಪಿಸಲಿಲ್ಲ ಎಂದು ಹೇಳಿದರು.
eesanje/url_46_89_10.txt ADDED
@@ -0,0 +1,7 @@
 
 
 
 
 
 
 
 
1
+ ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಮೈಸೂರು,ಹುಬ್ಬಳ್ಳಿ ಪೊಲೀಸ್ ಆಯುಕ್ತರ ಎತ್ತಂಗಡಿ
2
+ ಬೆಂಗಳೂರು, ಜು.3-ಕೊಲೆ, ಅಪರಾಧ ಚಟುವಟಿಕೆಗಳು ಹೆಚ್ಚಾಗಿ ಜನಸಾಮಾನ್ಯರಲ್ಲಿ ಅಸಮಾಧಾನ ಉಂಟಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ, ನಗರ ಪೊಲೀಸ್ ಆಯುಕ್ತರು ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
3
+ ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಭೀಕರ ಕೊಲೆಗಳಾಗಿದ್ದವು. ಇದರಿಂದ ಆತಂಕಗೊಂಡ ಹುಬ್ಬಳ್ಳಿ ಜನತೆ ಮಹಾನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆತಂಕ ವ್ಯಕ್ತಪಡಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದರು.
4
+ ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಸೇರಿದಂತೆ ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
5
+ ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ್ ಅವರನ್ನು ತತ್ಕ್ಷಣ ಜಾರಿಗೆ ಬರುವಂತೆ ಎಐಜಿಪಿಯಾಗಿ ಬೆಂಗಳೂರು ಡಿಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ನೇಮಿಸಲಾಗಿದೆ.
6
+ ನೇಹಾ-ಅಂಜಲಿ ಕೊಲೆ ನಡೆದಾಗ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸಾರ್ವಜನಿಕರು ಪ್ರತಿಭಟನೆ ಸಹ ಮಾಡಿದ್ದರು. ಕೊನೆಗೂ ಸರ್ಕಾರ ಸಾರ್ವಜನಿಕರ ಹೋರಾಟಕ್ಕೆ ಮತ್ತು ಕಾಂಗ್ರೆಸ್ ಮುಖಂಡರ ಮನವಿಗೆ ಸ್ಪಂದಿಸಿ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆ ಮಾಡಿದೆ.
7
+ ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ:ಲಾಬೂರಾಮ್: ಐಜಿಪಿ ಕೇಂದ್ರ ವಲಯರವಿಕಾಂತೇಗೌಡ: ಐಜಿಪಿ ಕೇಂದ್ರ ಕಚೇರಿ-1ಎನ್.ಶಶಿಕುಮಾರ್: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ಡಾ.ಕೆ.ತ್ಯಾಗರಾಜನ್: ಐಜಿಪಿ, ಐಎಸ್ಡಿಬಿ.ರಮೇಶ್: ಡಿಐಜಿಪಿ ಪೂರ್ವ ವಲಯ ದಾವಣಗೆರೆಸೀಮಾ ಲಾಟ್ಕರ್: ಪೊಲೀಸ್ ಆಯುಕ್ತ, ಮೈಸೂರು ನಗರಎನ್.ವಿಷ್ಣುವರ್ಧನ್: ಎಸ್ಪಿ, ಮೈಸೂರು ಜಿಲ್ಲೆರೇಣುಕಾ ಸುಕುಮಾರ್: ಎಐಜಿಪಿ (ಬೆಂಗಳೂರು ಡಿಜಿ ಕಚೇರಿ)ಸಿ.ಕೆ.ಬಾಬಾ: ಎಸ್ಪಿ, ಬೆಂಗಳೂರು ಗ್ರಾಮಾಂತರಸುಮನ್.ಡಿ.ಪೆನ್ನೇಕರ್: ಎಸ್ಪಿ, ಬಿಎಂಟಿಎ್ಸಿ.ಬಿ.ರಿಷ್ಯಂತ್: ಎಸ್ಪಿ, ವೈರ್ಲೆಸ್ಅರುಣಾಂಗ್ಷು ಗಿರಿ: ಎಸ್ಪಿ, ಸಿಐಡಿಚನ್ನಬಸವಣ್ಣ: ಎಐಜಿಪಿ, ಆಡಳಿತ ಪ್ರಧಾನ ಕಚೇರಿಎಂ.ನಾರಾಯಣ್: ಎಸ್ಪಿ, ಉತ್ತರ ಕನ್ನಡಎಸ್‌‍.ಾತಿಮಾ: ಡಿಸಿಪಿ, ಬೆಂಗಳೂರು ಆಗ್ನೇಯ ವಿಭಾಗಯತೀಶ್.ಎನ್: ಎಸ್ಪಿ, ದಕ್ಷಿಣ ಕನ್ನಡ ಜಿಲ್ಲೆಡಿ.ಎಲ್.ನಾಗೇಶ್: ಡಿಸಿಪಿ, ಸಿಎಆರ್ಹೆಚ್ ಪ್ರಧಾನ ಕಚೇರಿ, ಬೆಂಗಳೂರುಪದಿನಿ ಸಾಹೋ: ಡಿಸಿಪಿ ಆಡಳಿತ, ಬೆಂಗಳೂರು ನಗರಡಾ.ಟಿ.ಕವಿತಾ: ಎಸ್ಪಿ, ಚಾಮರಾಜನಗರ ಜಿಲ್ಲೆಪ್ರದೀಪ್ ಗುಂಟಿ: ಎಸ್ಪಿ, ಬೀದರ್ ಜಿಲ್ಲೆಬಿ.ನಿಖಿಲ್: ಎಸ್ಪಿ, ಕೋಲಾರ ಜ���ಲ್ಲೆಮಹಾನಿಂಗ್ ನಂದಗಾವಿ: ಡಿಸಿಪಿ ಕಾನೂನು ಸುವ್ಯವಸ್ಥೆ, ಹುಬ್ಬಳ್ಳಿ-ಧಾರವಾಡಮಲ್ಲಿಕಾರ್ಜುನ ಬಾಲದಂಡಿ: ಎಸ್ಪಿ, ಮಂಡ್ಯ ಜಿಲ್ಲೆವಿ.ಜೆ.ಡಾ.ಶೋಭಾ ರಾಣಿ: ಎಸ್ಪಿ, ಬಳ್ಳಾರಿ ಜಿಲ್ಲೆಕುಶಾಲ್ ಚೌಕ್ಸಿ: ಎಸ್ಪಿ, ಚಿಕ್ಕಬಳ್ಳಾಪುರ ಜಿಲ್ಲೆನೂತನ ಮೂರು ಕಾನೂನು ಜಾರಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
eesanje/url_46_89_11.txt ADDED
@@ -0,0 +1,5 @@
 
 
 
 
 
 
1
+ ಜು.8ರಿಂದ ಗುತ್ತಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ
2
+ ಬೆಂಗಳೂರು,ಜು.3-ಬಾಕಿ ಇರುವ ಸಾವಿರಾರು ಕೋಟಿ ರೂ. ಬಿಲ್‌ ಬಿಡುಗಡೆಗೆ ಒತ್ತಾಯಿಸಿ ಗುತ್ತಿಗೆದಾರರು ಜು.8 ರಿಂದ ತಮ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
3
+ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ ಗುತ್ತಿಗೆದಾರರು ಜು.8ರಿಂದ ಮುಷ್ಕರ ನಡೆಸಲು ಸಮತಿ ಸೂಚಿಸಿದ್ದಾರೆ.
4
+ ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ದ ಗುತ್ತಿಗೆದಾರರ ಬಂಡಾಯ..ನಂದಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಗುತ್ತಿಗೆದಾರರ ಸಭೆಯಲ್ಲಿ ವಾರ್ಡ್‌ ಕಾಮಗಾರಿ.ರಸ್ತೆ,ವೈಟ್‌ ಟಾಪಿಂಗ್‌ ಮಳೆ ನೀರು ಕಾಲುವೆ .ಕೆರೆ ಸೇರಿದಂತೆ ಎಲ್ಲ ರೀತಿಯ ಕಾಮಗಾರಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
5
+ ಗುತ್ತಿಗೆದಾರರ 1,600 ಕೋಟಿ ಬಿಲ್‌ ಬಾಕಿ ಉಳಿಸಿಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ತಮ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ಈ ತೀರ್ಮಾನ ಕೈಗೊಳ್ಳಬೇಕಾಯಿತು ಎಂದು ನಂದಕುಮಾರ್‌ ಮಾಹಿತಿ ನೀಡಿದ್ದಾರೆ.
eesanje/url_46_89_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮುಡಾ ಬಹುಕೋಟಿ ಹಗರಣವನ್ನುಸಿಬಿಐಗೆ ವಹಿಸುವಂತೆ ವಿಜಯೇಂದ್ರ ಒತ್ತಾಯ
2
+ ಬೆಂಗಳೂರು,ಜು.3-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ರಾಜ್ಯಸರ್ಕಾರ ಕೂಡಲೇ ಸಿಬಿಐಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನ ಮುಡಾದಲ್ಲೇ ಸುಮಾರು 4 ಸಾವಿರ ಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. ಇದರಲ್ಲಿ ಅನೇಕ ಪ್ರಭಾವಿಗಳೂ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.
4
+ ಈ ಮೊದಲು ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಏನೂ ನಡೆದಿಲ್ಲ ಎಂದು ತಿಪ್ಪೆ ಸಾರುವ ಕೆಲಸ ಮಾಡಲಾಯಿತು. ಬಳಿಕ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕಾಯಿತು. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ನೀಡಿದ್ದಾರೆ ಎಂದು ಸಬೂಬು ಹೇಳುತ್ತಿದ್ದಾರೆ. ತಪ್ಪೇ ಮಾಡಿಲ್ಲ ಎಂದ ಮೇಲೆ ಅವರು ರಾಜೀನಾಮೆ ಏಕೆ ನೀಡಿದರು? ಎಂದು ಪ್ರಶ್ನೆ ಮಾಡಿದರು.
5
+ ಮುಡಾದಲ್ಲಿ ಹಗರಣ ಹೊರಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ತಡಬರಿಸಿ ಸಭೆ ನಡೆಸಿದರು. ಅಕ್ರಮ ನಡೆದಿಲ್ಲ ಎಂದರೆ ಆಯುಕ್ತರು, ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತನಿಖೆಗೆ ಆದೇಶ ಮಾಡಿರುವುದು ಏಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
6
+ ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ತಮ ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂ. ಬೆಲೆ ಬಾಳುವ ನಿವೇಶನಗಳನ್ನು ಹಿಂಬಾಲಕರಿಗೆ ಹಂಚಿಕೆ ಮಾಡಿದ್ದಾರೆ. ಇದೀಗ ಈ ಹಗರಣದಲ್ಲಿ ಸ್ವತಃ ಸಿಎಂ ಅವರ ಪತ್ನಿಯೂ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
7
+ ಮುಖ್ಯಮಂತ್ರಿ ಕುಟುಂಬದ ಮೇಲೆ ಆರೋಪ ಬಂದಾಗ ರಾಜ್ಯಸರ್ಕಾರದ ತನಿಖಾ ಸಂಸ್ಥೆಗಳು ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು.ಮುಡಾದಲ್ಲಿ ಅಕ್ರಮ ನಡೆದಿಲ್ಲ ಎಂದರೆ ಸಚಿವ ಭೈರತಿ ಸುರೇಶ್‌ ಅವರು ಅಧಿಕಾರಿಗಳನ್ನು ಏಕೆ ವರ್ಗಾವಣೆ ಮಾಡಬೇಕಿತ್ತು?, ಇದು ಸಿಎಂ ಕುಟುಂಬದ ಬುಡಕ್ಕೆ ಬರುತ್ತದೆ ಎಂದು ಗೊತ್ತಾದ ಮೇಲೆ ಹಗರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತವಾದ ಷಡ್ಯಂತ್ರ ಮಾಡಲಾಗಿದೆ.
8
+ ಯತೀಂದ್ರ ಹಾಗೂ ಇತರರನ್ನು ರಕ್ಷಣೆ ಮಾಡುವ ಕಾರಣಕ್ಕಾಗಿಯೇ ಸರ್ಕಾರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.ತಮ ಬುಡಕ್ಕೂ ಹಗರಣ ಸುತ್ತಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಸಚಿವ ಸುರೇಶ್‌ ಅವರು ಹಗರಣದ ಕಡತವನ್ನು ರಾತ್ರೋರಾತ್ರಿ ತೆಗೆದುಕೊಂಡು ಬಂದಿದ್ದಾರೆ. ಈಗ ಏನೂ ಇಲ್ಲ ಎಂದು ತಿಪ್ಪೆ ಸಾರುವ ಕೆಲಸ ನಡೆಯುತ್ತಿದೆ. ನನಗಿರುವ ಮಾಹಿತಿ ಪ್ರಕಾರ, 4 ಸಾವಿರ ಕೋಟಿ ಹಗರಣ ನಡೆದಿದೆ. ಇದರಲ್ಲಿ ಸಿದ್ದರಾಮಯ್ಯ ಹಾಗೂ ಭೈರತಿ ಸುರೇಶ್‌ ನೇರ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದರು.
9
+ ವಾಲೀಕಿ ಅಭಿವೃದ್ಧಿ ನಿಗಮದಲ್ಲೂ ಏನೂ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಸಚಿವರು ಸಮರ್ಥಿಸಿಕೊಳ್ಳುತ್ತಿದ್ದರು. ನಾಗೇಂದ್ರ ಬಂಧನವಾದರೆ ಸರ್ಕಾರದ ಬುಡವೇ ಅಲುಗಾಡಲಿದೆ ಎಂಬ ಕಾರಣಕ್ಕಾಗಿ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ.
10
+ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌‍ ಈಗ ಅದೇ ಬ್ರಹಾಂಡ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿದೆ. ಲೋಕಸಭಾ ಚುನಾವಣೆಯಲ್ಲೂ ಜನತೆ ಸರಿಯಾದ ಪಾಠವನ್ನು ಕಲಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದರು.
eesanje/url_46_89_2.txt ADDED
@@ -0,0 +1,6 @@
 
 
 
 
 
 
 
1
+ ಸಿಎಂ ಮಾಡಿ ಎಂದು ಹೇಳುವುದು ಮಠಾಧೀಶರ ಕೆಲಸವಲ್ಲ : ಬಸವ ಜಯಮೃತ್ಯುಂಜಯ ಸ್ವಾಮೀಜಿ
2
+ ಹುಬ್ಬಳ್ಳಿ,ಜು.4-ಯಾವುದೇ ಸರ್ಕಾರದಲ್ಲಿ ಇವರನ್ನೇ ಮುಖ್ಯಮಂತ್ರಿ ಮಾಡಿ ಎಂದು ಹೇಳುವುದು ಮಠಾಧೀಶರ ಕೆಲಸವಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
3
+ ಮುಖ್ಯಮಂತ್ರಿ ಮಾಡುವುದು ಆಡಳಿತ ಪಕ್ಷದ ಶಾಸಕರ ಕೆಲಸ, ಸಲಹೆ ಕೇಳಿದರೆ ಸಮಾಜದ ಗುರುಗಳಾಗಿ ಸಲಹೆ ಕೊಡಬೇಕು, ಮೀಸಲಾತಿ ಪಾದಯಾತ್ರೆಯ ನಂತರ ಇವರನ್ನೇ ಮಂತ್ರಿ ಮಾಡಿ ಎಂದು ಹೇಳುವುದನ್ನು ಬಿಟ್ಟಿದ್ದೇವೆ. ನಮ ಗುರಿಯೇನಿದ್ದರೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡಿಸುವುದು ಎಂದರು.
4
+ ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಹೋರಾಟದಿಂದ ಸ್ಫೂರ್ತಿ ಪಡೆದು ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಪಂಚಮಸಾಲಿ ಸಮಾಜದ ಬೇಡಿಕೆಗೆ ಸ್ಪಂದಿಸಿ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ ಎಂದರು.
5
+ ರಾಜ್ಯ ಸರ್ಕಾರ ಮಳೆಗಾಲದ ಅಧಿವೇಶನದಲ್ಲಿ 2 ಎ ಮೀಸಲಾತಿ ಘೋಷಿಸಬೇಕು ಎಂದು ಆಗ್ರಹಿಸಿದ ಅವರು, ಅಧಿವೇಶನದಲ್ಲಿ ಮೀಸಲಾತಿ ಹಕ್ಕು ಪ್ರತಿಪಾದಿಸಲು ಪಂಚಮಸಾಲಿ ಸಮಾಜದ ಶಾಸಕರನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.
6
+ ಜುಲೈ 6ರಂದು ಹುಬ್ಬಳ್ಳಿಯಲ್ಲಿ ಪತ್ರ ಚಳವಳಿ ನಡೆಯಲಿದ್ದು, ಶಾಸಕ ಎಮ್‌‍.ಆರ್‌. ಪಾಟೀಲ್‌‍, ಅರವಿಂದ ಬೆಲ್ಲದ್‌ ಮನೆಗೆ ಹೋಗಿ ಆಗ್ರಹ ಪತ್ರ ನೀಡಲಾಗುವುದು. ನಮ ಶಾಸಕರು ಅಧಿವೇಶನದಲ್ಲಿ ಮೀಸಲಾತಿಗೆ ಆಗ್ರಹಿಸದೆ ಇರುವುದು ಸಮಾಜಕ್ಕೆ ನಿರಾಸೆ ಮೂಡಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
eesanje/url_46_89_3.txt ADDED
@@ -0,0 +1,8 @@
 
 
 
 
 
 
 
 
 
1
+ 4 ಸಾವಿರ ಕೋಟಿ ಭ್ರಷ್ಟಾಚಾರ : ತಕ್ಷಣ ಸಿಎಂ ರಾಜೀನಾಮೆಗೆ ಆರ್‌.ಅಶೋಕ್‌ ಒತ್ತಾಯ
2
+ ಬೆಂಗಳೂರು,ಜೂ.4-ಸಾವಿರಾರು ಬ್ರಹಾಂಡ ಭ್ರಷ್ಟಾಚಾರ ನಡೆದಿದೆ ಎನ್ನಲಾದ ಮೂಡಾ ಹಗರಣವನ್ನು ರಾಜ್ಯ ಸರ್ಕಾರ ಕೂಡಲೇ ಸಿಬಿಐ ತನಿಖೆಗೆ ವಹಿಸಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.
3
+ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಶಕಗಳಲ್ಲಿ ಇದು ಬಹುದೊಡ್ಡ ಹಗರಣವಾಗಿದೆ. ಅಂದಾಜ 4 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೂಡಲೇ ಸಿಬಿಐಗೆ ವಹಿಸಬೇಕೆಂದು ಅವರು ಆಗ್ರಹಿಸಿದರು.
4
+ ಮೂಡಾ ಹಗರಣದಲ್ಲಿ ಬಿಜೆಪಿ, ಜೆಡಿಎಸ್‌‍ ಸೇರಿದಂತೆ ಯಾರೇ ಇದ್ದರೂ ಮುಖ್ಯಮಂತ್ರಿಗಳು ನಿರ್ದಾಕ್ಷಿಣ್ಯವಾಗಿ ಬಂಧಿಸಲಿ. ಅದಕ್ಕೆ ನಮದೇನು ತಕರಾರು ಇಲ್ಲ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬದವರ ಹೆಸರೇ ಕೇಳಿಬರುತ್ತಿರುವುದರಿಂದ ನೈತಿಕವಾಗಿ ಅಧಿಕಾರದಲ್ಲಿ ಮುಂದುವರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.
5
+ ಬಿಜೆಪಿ ಕಾಲದಲ್ಲಿ ಇದು ಹಗರಣವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಯಾರ ಕಾಲದಲ್ಲಿ ನಡೆದಿದ್ದರೂ ತನಿಖೆಯಾಗಬೇಕು. ಅಂದು ಮೂಡಾದಲ್ಲಿ ಆಯುಕ್ತರಾದವರು ಯಾರೆಂಬುದನ್ನು ಪತ್ತೆಹಚ್ಚಿ ಬಂಧಿಸಬೇಕಲ್ಲವೇ ಎಂದು ಅಶೋಕ್‌ ಸಿಎಂಗೆ ತಿರುಗೇಟು ನೀಡಿದರು.
6
+ 86 ಸಾವಿರ ಜನರು ನಿವೇಶನ ಪಡೆಯಲು ಅರ್ಜಿ ಹಾಕಿದ್ದಾರೆ. ಅವರಿಗೆ ನಿವೇಶನವನ್ನೇ ಕೊಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ ಕೂಡ ದೊಡ್ಡ ಫಲಾನುಭವಿಯಾಗಿದ್ದಾರೆ. ಒಮೆ ಜಮೀನನ್ನು ಸರ್ಕಾರ ಭೂ ಸ್ವಾಧೀನ ಮಾಡಿಕೊಂಡರೆ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಪಾರ್ವತಮಗೆ ನಿವೇಶನ ಬದಲಾಯಿಸಿ ಬೇರೊಂದು ಕಡೆ ನಿವೇಶನ ಕೊಡಲು ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು.
7
+ 50-50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುವ ನಿಯಮವೇ ಕಾನೂನು ಬಾಹಿರ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಭೂ ಸ್ವಾಧೀನ ಮಾಡಿಕೊಂಡರೆ ಎಂಜಿ ರಸ್ತೆಯಲ್ಲಿ ಬದಲಿ ನಿವೇಶನ ಕೊಟ್ಟಂತಾಗುತ್ತದೆ. ಮೂಡಾ ಅಧ್ಯಕ್ಷರೇ ಹಲವು ಬಾರಿ ಪತ್ರ ಬರೆದು ಇದು ಅಕ್ರಮ ಎಂದು ಹೇಳಿದ್ದಾರೆ.
8
+ ಆದರೆ ಇದರಲ್ಲಿ ಅನೇಕ ಪ್ರಭಾವಿಶಾಲಿಗಳು ಮತ್ತು ಮಧ್ಯವರ್ತಿಗಳು ಶಾಮೀಲಾಗಿದ್ದಾರೆ. ಈ ಪ್ರಕರಣವನ್ನು ನಾವು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವರೆಗೂ ಬಿಡುವುದಿಲ್ಲ ಎಂದು ಅಶೋಕ್‌ ಎಚ್ಚರಿಸಿದರು.
eesanje/url_46_89_4.txt ADDED
@@ -0,0 +1,6 @@
 
 
 
 
 
 
 
1
+ ಹಾಸನ ಜಿಲ್ಲೆಯಲ್ಲಿ ಡೆಂಘೀಗೆ ಬಾಲಕಿ ಬಲಿ
2
+ ಹಾಸನ,ಜು.4-ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಡೆಂಘೀ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಮಹಾಮಾರಿಗೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಗುಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲಾಶ್ರೀ ಜಿ.ಎಲ್‌. (11) ಮೃತಪಟ್ಟ ಬಾಲಕಿ.
3
+ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಹೊಳೆನರಸೀಪುರ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬಾಲಕಿ ಮೃಪಟ್ಟಿದ್ದಾಳೆ.ಡೆಂಘೀಯಿಂದ ಇದುವರೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
4
+ ಜೂ.28 ರಂದು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಗ್ರಾಮದಲ್ಲಿ ವರ್ಷಿಕ (8) ಅತಿಯಾದ ಜ್ವರದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದು, ಇದು ಡೆಂಘೀ ಮಹಾಮಾರಿಗೆ ಎರಡನೇ ಬಲಿಯಾಗಿದ್ದು, ತಾಲ್ಲೂಕಿನಾದ್ಯಂತ ಆತಂಕ ಮನೆ ಮಾಡಿದೆ.
5
+ ತಾವು ವಾಸಿಸುವ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಮಾಡುತ್ತಿರಬೇಕು. ಮಳೆ ನೀರು, ಹಸಿಕಸಿ ಶೇಖರಣೆಯಾಗುವಂತಹ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು.
6
+ ನೀರು ಸಂಗ್ರಹ ಮಾಡುವ ತೊಟ್ಟಿಗಳನ್ನು ಎರಡು ದಿನಕ್ಕೊಮೆ ಸ್ವಚ್ಛ ಮಾಡಬೇಕು. ಸಣ್ಣ ಜ್ವರ ಬಂದರೂ ಸಹ ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಮಂಡಳಿ ಮನವಿ ಮಾಡಿದೆ.
eesanje/url_46_89_5.txt ADDED
@@ -0,0 +1,5 @@
 
 
 
 
 
 
1
+ ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆ : ಕಬಿನಿ, ಕೆಆರ್‌ಎಸ್‌‍ ಒಳಹರಿವು ಹೆಚ್ಚಳ
2
+ ಬೆಂಗಳೂರು,ಜು.4-ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ,ಕೆಆರ್‌ಎಸ್‌‍ ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕಬಿನಿ ಜಲಾಶಯಕ್ಕೆ 18,560 ಕ್ಯೂಸೆಕ್ಸ್ ಒಳಹರಿವಿನ ಪ್ರಮಾಣವಿದ್ದು, 84 ಅಡಿ ಎತ್ತರದ ಜಲಾಶಯದಲ್ಲಿ ಈಗಾಗಲೇ 80 ಅಡಿ ನೀರು ಸಂಗ್ರಹವಾಗಿದೆ.
3
+ ಕಬಿನಿ ಜಲಾಶಯದ ಭರ್ತಿಯಾಗಲು ಕೇವಲ 4 ಅಡಿ ಬಾಕಿಯಿದ್ದು, ಇದೇ ರೀತಿ ಮಳೆ ಮುಂದುವರೆದು ಒಳಹರಿವಿನ ಪ್ರಮಾಣ ಹೆಚ್ಚಾದರೆ ಇನ್ನೆರಡು ದಿನಗಳಲ್ಲಿ ಕಬಿನಿ ಜಲಾಶಯ ಭರ್ತಿಯಾಗಲಿದೆ. ಕೃಷ್ಣರಾಜ ಸಾಗರಕ್ಕೂ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. 124.8 ಅಡಿ ಎತ್ತರದ ಅಣ್ಣೆಕಟ್ಟಿನಲ್ಲಿ 100 ಮಟ್ಟದಲ್ಲಿ ನೀರು ಸಂಗ್ರಹವಾಗಿದೆ.
4
+ 49.452 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 22.267 ಟಿಎಂಸಿ ನೀರು ಸಂಗ್ರಹವಾಗಿದೆ. 11,189 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದುಬರುತ್ತಿದ್ದು, ಜಲಾಶಯದ ನೀರಿನ ಸಂಗ್ರಹ ದಿನೇ ದಿನೇ ಹೆಚ್ಚಾಗುತ್ತಿದೆ. ಒಳಹರಿವಿನ ಪ್ರಮಾಣ 540 ಕ್ಯೂಸೆಕ್‌ ಇದೆ.
5
+ ದಿನೇ ದಿನೇ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮನೆ ಮಾಡಿದೆ. ಶೀಘ್ರವೇ ನಾಲೆಗಳಿಗೆ ನೀರು ಬಿಡುವ ನಿರೀಕ್ಷೆಯಲ್ಲಿ ಅನ್ನದಾತರು ಇದ್ದಾರೆ.
eesanje/url_46_89_6.txt ADDED
@@ -0,0 +1,8 @@
 
 
 
 
 
 
 
 
 
1
+ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಸಮರ್ಥಿಸಿಕೊಂಡ ಬಿ.ಕೆ. ಹರಿಪ್ರಸಾದ್‌
2
+ ಬೆಂಗಳೂರು,ಜು.3-ದೇಶದ ಆಂತರಿಕ ಕ್ಷೋಭೆ ಯನ್ನು ಹತ್ತಿಕ್ಕಲು ಆಗಿನ ಪ್ರಧಾನಿ ಇಂದಿರಾ ಗಾಂಧಿ ಯವರು ತುರ್ತು ಪರಿಸ್ಥಿತಿ ಯನ್ನು ಜಾರಿ ಗೊಳಿಸಿದ್ದರು. ಇದು ಸಂವಿಧಾನ ಬಾಹಿರ ವಾಗಿರಲಿಲ್ಲ ಎಂದು ಕಾಂಗ್ರೆಸ್‌‍ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ಸಮರ್ಥಿಸಿ ಕೊಂಡಿದ್ದಾರೆ.
3
+ ಪಕ್ಷದ ಕಚೇರಿಯಲ್ಲಿಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸರ್ಕಾರ ರಚನೆ ವೇಳೆ ರಾಷ್ಟ್ರಪತಿಯವರು ಸಂಸತ್‌ನ ಜಂಟಿ ಅಧಿವೇಶನದಲ್ಲಿ ತಮ ಭವಿಷ್ಯದ ಯೋಜನೆಗಳನ್ನು ಪ್ರಸ್ತಾಪಿಸಿ ವಿವರಣೆ ನೀಡುವುದು ಸಾಮಾನ್ಯ. ಆದರೆ ಈ ಬಾರಿ ನರೇಂದ್ರ ಮೋದಿಯವರ ಸರ್ಕಾರ ರಾಷ್ಟ್ರಪತಿಯವರಿಂದ ಮಾಡಿಸಿರುವ ಭಾಷಣದಲ್ಲಿ ತುರ್ತು ಪರಿಸ್ಥಿತಿಯನ್ನು ಪ್ರಸ್ತಾಪ ಮಾಡಿರುವುದು ಖಂಡನೀಯ.
4
+ ದೇಶದ ಒಳಗೆ ಮತ್ತು ಹೊರಗೆ ರಾಷ್ಟ್ರವಿರೋಧಿ ಶಕ್ತಿಗಳು ವಿಜೃಂಭಿಸಿದಾಗ ಸುರಕ್ಷತಾ ದೃಷ್ಟಿಯಿಂದ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಲು ಸಂವಿಧಾನದಲ್ಲಿ ಅವಕಾಶ ವಿದೆ. ಹೀಗಾಗಿ ಶ್ರೀಮತಿ ಇಂದಿರಾ ಗಾಂಧಿಯವರು ಜಾರಿಗೊಳಿಸಿದ ತುರ್ತು ಪರಿಸ್ಥಿತಿ ಸಂವಿಧಾನ ಬಾಹಿರ ವಲ್ಲ ಎಂದು ಸಮರ್ಥಿಸಿ ಕೊಂಡರು.
5
+ ತುರ್ತು ಪರಿಸ್ಥಿತಿಯ ಸಂದರ್ಭದಲ್ಲೂ ಕಾಂಗ್ರೆಸ್‌‍ ಸರ್ಕಾರ ಸಮಾಜ ಘಾತುಕ ಶಕ್ತಿಗಳು, ಕಳ್ಳ ಸಾಗಣಿಕೆದಾರರು, ರಾಷ್ಟ್ರದ ಸಂವಿಧಾನವನ್ನು ಬುಡಮೇಲು ಮಾಡಲು ಯತ್ನಿಸಿದವರನ್ನು ಜೈಲಿಗೆ ಹಾಕಲಾಗಿತ್ತು. ಆದರೆ ಈಗಿನ ಕೇಂದ್ರ ಸರ್ಕಾರ ವಿವಿಧ ರಾಜ್ಯದ ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಿದೆ. ವಿಪಕ್ಷ ನಾಯಕರ ಮೇಲೆ ಹಗೆತನ ಸಾಧಿಸುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ ವಿರೋಧಪಕ್ಷದ ನಾಯಕರಾಗಿದ್ದ ವಾಜಪೇಯಿ ಅವರನ್ನು ಗೃಹಬಂಧನದಲ್ಲಿಡಲಾಗಿತ್ತು. ಈಗ ಕೇಂದ್ರ ಸರ್ಕಾರ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರ ಕಣ್ಣೆದುರಿಗಿದೆ ಎಂದು ನುಡಿದರು.
6
+ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ವಿರೋಧಿ ಶಕ್ತಿಗಳನ್ನು ಹತ್ತಿಕ್ಕಲು ತುರ್ತು ಪರಿಸ್ಥಿತಿ ಹೇರಿದ್ದ ರಲ್ಲಿ ತಪ್ಪಿಲ್ಲ. ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಅಲಹಾಬಾದ್‌ ಹೈಕೋರ್ಟ್‌ ಇಂದಿರಾಗಾಂಧಿ ವಿರುದ್ಧ ತೀರ್ಪು ನೀಡುತ್ತದೆ. ತೀರ್ಪು ನೀಡಿದ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ಗೆ ಮೇಲನವಿ ಸಲ್ಲಿಸಲು 7 ವಾರಗಳ ಕಾಲಾವಕಾಶ ನೀಡಿದರು. ಸುಪ್ರೀಂಕೋರ್ಟ್‌ ಕೂಡ ಇಂದಿರಾ ಗಾಂಧಿಯವರನ್ನು ಪ್ರಧಾನಿ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುತ್ತದೆ ಎಂದು ಹೇಳಿದರು.
7
+ ಜಯಪ್ರಕಾಶ್‌ ನಾರಾಯಣ್‌ ಅವರು ಇಂದಿರಾಗಾಂಧಿಯವರ ವಿರುದ್ಧ ಪ್ರಜಾಸತ್ತಾತಕ ಹೋರಾಟ ನಡೆಸುವ ಬದಲಾಗಿ ಸೇನೆ ಹಾಗೂ ಇತರ ಸಶಸ್ತ್ರ ಪಡೆಗಳಿಗೆ ದಂಗೆ ಏಳಲು ಕರೆ ನೀಡುತ್ತಾರೆ. ಹೀಗಾಗಿ ಅನಿವಾರ್ಯವಾಗಿ ತುರ್ತು ಪರಿಸ್ಥಿತಿ ಹೇರಬೇಕಾಗುತ್ತದೆ. ಕೊನೆಗೆ ಅದನ್ನು ಹಿಂದೆ ಪಡ���ದಿದ್ದೂ ಕೂಡ ಇಂದಿರಾ ಗಾಂಧಿಯವರೇ ಎಂದು ವಿವರಿಸಿದರು.
8
+ ತುರ್ತು ಪರಿಸ್ಥಿತಿ ಜಾರಿಯಲ್ಲಿ ಯಾವುದೇ ಸಂವಿಧಾನ ಉಲ್ಲಂಘನೆ ಯಾಗಿರಲಿಲ್ಲ. ಕಾಂಗ್ರೆಸ್‌‍ ಎಂದೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದು ಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
eesanje/url_46_89_7.txt ADDED
@@ -0,0 +1,4 @@
 
 
 
 
 
1
+ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ
2
+ ಬೆಂಗಳೂರು, ಜು.3– ಸ್ಥಳ ನಿರೀಕ್ಷೆಯಲ್ಲಿದ್ದ ಹಿರಿಯ ಐಪಿಎಸ್‌‍ ಅಧಿಕಾರಿ ಹಾಗೂ ಎಡಿಜಿಪಿ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಹ್ದುೆಗೆ ಸರ್ಕಾರ ವರ್ಗಾವಣೆ ಮಾಡಿದ್ದು, ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
3
+ ಹಾಲಿ ಆಯುಕ್ತರಾಗಿದ್ದ ಐಎಎಸ್‌‍ ಅಧಿಕಾರಿ ಸೂರಳ್ಕರ್‌ ವಿಕಾಸ್‌‍ ಕಿಶೋರ್‌ ಅವರನ್ನು ಬೆಂಗಳೂರು ಬಿಬಿಎಂಪಿ ವಿಶೇಷ ಆಯುಕ್ತರು (ಆರೋಗ್ಯ) ಹ್ದುೆಗೆ ಸರ್ಕಾರ ವರ್ಗಾವಣೆ ಮಾಡಿದೆ.
4
+ ಈ ಹಿಂದೆ ಕೂಡ ಹೇಮಂತ್‌ ಎಂ.ನಿಂಬಾಳ್ಕರ್‌ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದರು. ಈ ವೇಳೆ ಇಲಾಖೆಯ ಹಿರಿಯ ಅಧಿಕಾರಿಗಳು ಪುಷ್ಪಗುಚ್ಛ ನೀಡಿ ಅವರಿಗೆ ಶುಭ ಹಾರೈಸಿದರು.
eesanje/url_46_89_8.txt ADDED
@@ -0,0 +1,7 @@
 
 
 
 
 
 
 
 
1
+ ಮೂಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ : ಆರ್‌.ಅಶೋಕ್‌ ಆಕೋಶ
2
+ ಬೆಂಗಳೂರು, ಜು.3-ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಾಗಲೇ ಲೂಟಿ ಹೊಡೆಯಲು ಸುರಂಗ ಕೊರೆದಿದ್ದಾರೆ. ಈಗ ಮೂಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದ್ದು, ಈ ಸರ್ಕಾರ ಲೂಟಿ ಮಾಡೆಲ್‌ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆಕೋಶ ವ್ಯಕ್ತಪಡಿಸಿದರು.
3
+ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಕಾಂಗ್ರೆಸ್‌‍ ಸರ್ಕಾರದ ಜನ ವಿರೋಧಿ ನಿಲುವು ವಿರುದ್ಧ ಬಿಜೆಪಿ ಶಾಸಕರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಆರ್‌.ಅಶೋಕ್‌ ಮುತ್ತಿಗೆ ಹಾಕಿದರು.
4
+ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ತೆಲಂಗಾಣದ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ, ಚಿನ್ನದ ಅಂಗಡಿಗಳಿಗೆ ಟಕಾಟಕ್‌ ಎಂದು ವರ್ಗಾವಣೆ ಮಾಡಿದ್ದಾರೆ. ಬಿಜೆಪಿಯ ಹೋರಾಟದ ಲವಾಗಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರೂ, ಸ್ವಯಂಪ್ರೀರಣೆಯಿಂದ ನೀಡಿದ್ದಾರೆ ಎಂದು ಕಾಂಗ್ರೆಸ್‌‍ನವರು ಹೇಳುತ್ತಿದ್ದಾರೆ. ಈಗ ಮುಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.
5
+ ಹಿಂದೆ ತುರ್ತು ಪರಿಸ್ಥಿತಿ ಜಾರಿ ಮಾಡಿದಂತೆಯೇ ಈಗ ಕಾಂಗ್ರೆಸ್‌‍ ಸರ್ಕಾರ ಬೆಂಗಳೂರಿನಲ್ಲಿ ತುರ್ತು ಸ್ಥಿತಿ ಜಾರಿಗೊಳಿಸಿದೆ. ಬಿಜೆಪಿ ಶಾಸಕರು ಸಿಎಂ ಮನೆಗೆ ಬರಬಾರದೆಂದು ನೂರಾರು ಪೊಲೀಸರನ್ನು ನಿಯೋಜಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ. ರಾಮೇಶ್ವರಂ ಕೆೆಯಲ್ಲಿ ಬಾಂಬ್‌ ಸ್ಫೋಟ ಮಾಡಿದ ಭಯೋತ್ಪಾದಕರನ್ನು ಹಿಡಿಯಲು ಐದಾರು ಪೊಲೀಸರನ್ನು ಕಳುಹಿಸಿದ್ದರು. ಇಲ್ಲಿ ಶಾಸಕರನ್ನು ಹಿಡಿಯಲು ನೂರಾರು ಪೊಲೀಸರನ್ನು ಕಳುಹಿಸಲಾಗಿದೆ ಎಂದು ಆಕೋಶ ಹೊರಹಾಕಿದರು.
6
+ ಮೈಸೂರು ಮುಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ. 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಿ 3-4 ಸಾವಿರ ಕೋಟಿ ರೂ. ಲೂಟಿ ಮಾಡಲಾಗಿದೆ. 86 ಸಾವಿರ ಅರ್ಜಿಗಳನ್ನು ಸಲ್ಲಿಸಿದ ಬಡವರಿಗೆ ನಿವೇಶನ ನೀಡಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿವೇಶನ ನೀಡಿದ್ದಾರೆ. 15 ನಿವೇಶನ ನೀಡಬೇಕಾದಲ್ಲಿ 60 ನಿವೇಶನ ನೀಡಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ನಿವೇಶನ ದೋಚಿದ್ದಾರೆ. ಕಾಂಗ್ರೆಸ್‌‍ನದ್ದು ಲೂಟಿ ಮಾಡೆಲ್‌ ಎಂದರು.
7
+ ಕಾಂಗ್ರೆಸ್‌‍ ಸರ್ಕಾರ ಕೂಡಲೇ ಈ ನಿವೇಶನ ಯೋಜನೆಯನ್ನು ರದ್ದು ಮಾಡಬೇಕು. ತನಿಖೆಯನ್ನು ಸಿಬಿಐಗೆ ವಹಿಸಿದರೆ ಸತ್ಯ ಹೊರಬರಲಿದೆ. ಈ ವಿಚಾರವನ್ನು ಸದನದಲ್ಲಿ ಮಾತನಾಡಿ ಸತ್ಯ ಬಯಲಿಗೆ ತರುತ್ತೇವೆ ಎಂದರು.
eesanje/url_46_89_9.txt ADDED
@@ -0,0 +1,8 @@
 
 
 
 
 
 
 
 
 
1
+ ಕಲುಷಿತ ನೀರಿನ ದುರಂತ ಮರುಕಳಿಸಿದರೆ ಅಧಿಕಾರಿಗಳೇ ಹೊಣೆ : ಸಿಎಂ ಎಚ್ಚರಿಕೆ
2
+ ಬೆಂಗಳೂರು,ಜು.3-ಕಲುಷಿತ ನೀರಿನ ಪ್ರಕರಣಗಳು ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದ ಒಳಾಂಗಣ ದಲ್ಲಿ ನಡೆದ ವಿಶ್ವಪರಿಸರ ದಿನಾಚರಣೆಯಲ್ಲಿ ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಲುಷಿತ ನೀರಿನ ಹಾಗೂ ವಿಷಾಹಾರ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದರು.ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು.
3
+ ಇನ್ನು ಮುಂದೆ ಯಾವುದೇ ಪ್ರಕರಣಗಳು ವರದಿಯಾದರೂ ಅದಕ್ಕೆ ಅಧಿಕಾರಿಗಳನ್ನು ಜವಾಬ್ದಾರಿಯನ್ನಾಗಿ ಮಾಡಲಾಗುವುದು ಎಂದು ಹೇಳಿದರು.ಡೆಂಘೀ ಜ್ವರ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ರೋಗಕ್ಕೆ ಕಾರಣವಾಗುವ ಸೊಳ್ಳೆಗಳನ್ನು ನಾಶಪಡಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಇಲಾಖೆ, ಬಿಬಿಎಂಪಿ, ಸ್ಥಳೀಯ ಆಡಳಿತದ ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
4
+ ತ್ಯಾಜ್ಯವನ್ನು ಬೇಕಾಬಿಟ್ಟಿ ಬಿಸಾಡುವ ಬದಲು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಮಳೆ ನೀರನ್ನು ಸಂರಕ್ಷಿಸುವ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡರೆ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಹೇಳಿದರು.
5
+ ನಿಸರ್ಗವನ್ನು ಪ್ರೀತಿಸಬೇಕು. ಮರಗಿಡಗಳನ್ನು ಬೆಳೆಸಬೇಕು. ಒಂದು ಮರ ಕಡಿದರೆ, ಅದಕ್ಕೆ ಬದಲಾಗಿ ಮತ್ತೊಂದು ಗಿಡ ನೆಡಬೇಕು. ಕಳೆದ 20 ವರ್ಷಗಳಿಂದಲೂ ನೆರೆ ಹಾಗೂ ಬರ ಪರಿಸ್ಥಿತಿಗಳು ರಾಜ್ಯವನ್ನು ಕಾಡುತ್ತಿವೆ. ಇವುಗಳನ್ನು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆಗಳು ಸರಿಯಾದ ದಾರಿಯಲ್ಲಿರಬೇಕು. ಎಲ್ಲೆಲ್ಲಿ ಸಂಶೋಧನಾ ಕೇಂದ್ರಗಳನ್ನು ತೆರೆಯಬೇಕು ಎಂಬ ಬಗ್ಗೆ ಗಮನ ಕೊಡುವುದು ಅರಣ್ಯ ಇಲಾಖೆಯ ಜವಾಬ್ದಾರಿ ಎಂದರು.
6
+ ಮಕ್ಕಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಬೇಕು. ಜಾಗತಿಕ ಅಸಮತೋಲನಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಒಂದು ದಿನ ಕಾರ್ಯಕ್ರಮ ಆಚರಿಸಿ ಮರೆತುಬಿಡುವ ಬದಲು ಪ್ರತಿದಿನವೂ ಪರಿಸರ ರಕ್ಷಣೆಯ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.ಜೂ.5 ರಂದು ಪರಿಸರ ದಿನಾಚರಣೆ ಆಚರಿಸಬೇಕಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಕಾರಣಕ್ಕಾಗಿ ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
7
+ ಕಾರ್ಯಕ್ರಮದಲ್ಲಿ ಪರಿಸರ ರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮಕ್ಕಳು ಪರಿಸರ ಕಾಳಜಿಯ ಕುರಿತು ಆಶುಭಾಷಣ ನಡೆಸಿದರು. ಕಂಠೀರವ ಕ್ರೀಡಾಂಗಣದ ಹೊರಾಂಗಣದಲ್ಲಿ ಸಸಿ ನೆಟ್ಟ ಮುಖ್ಯಮಂತ್ರಿ ಪರಿಸರ ಮಾಲಿನ್ಯ ತಡೆಗೆ ಕೈಗೊಳ್ಳಬಹುದಾದ ಯೋಜನೆಗಳು ಹಾಗೂ ಯಂತ್ರೋಪಕರಣಗಳ ಪ್ರದರ್ಶನವನ್ನು ವೀಕ್ಷಿಸಿದರು.
8
+ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ರೆಹಮಾನ್ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಮರಿಗೌಡ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
eesanje/url_46_8_1.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಆನ್ಲೈನ್ ಜಾಬ್ ಟಾಸ್ಕ್ ಹೆಸರಲ್ಲಿ 6 ಕೋಟಿ ರೂ. ವಂಚನೆ, 10 ಮಂದಿ ಬಂಧನ
2
+ 10
3
+ ಬೆಂಗಳೂರು,ಸೆ.27-ಆನ್ಲೈನ್ ಜಾಬ್ ಟಾಸ್ಕ್ ಹೆಸರಲ್ಲಿ ಆರು ಕೋಟಿ ರೂ. ಹಣವನ್ನು ಪಡೆದು ವಂಚಿಸುತ್ತಿದ್ದ ನಗರದ ಹತ್ತು ಮಂದಿ ಆರೋಪಿಗಳನ್ನು ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 72 ಮೊಬೈಲ್ ಫೋನ್ಗಳು, 182 ಡೆಬಿಟ್ ಕಾರ್ಡ್ಗಳು, 2 ಲ್ಯಾಪ್ಟಾಪ್, ವಿವಿಧ ಕಂಪನಿಯ 133 ಸಿಮ್ ಕಾರ್ಡ್ಗಳು, 127 ಬ್ಯಾಂಕ್ ಪಾಸ್ಪುಸ್ತಕಗಳು ಹಾಗೂ 1.74 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
4
+ ಆರೋಪಿಗಳೆಲ್ಲರೂ ನಗರದವರಾಗಿದ್ದು, ಈ ಪ್ರಕರಣಗಳಂತೆಯೇ ಭಾರತದಾದ್ಯಂತ ವಿವಿಧ 21 ರಾಜ್ಯಗಳಲ್ಲಿ ಒಟ್ಟು 122 ಎನ್ಸಿಆರ್ಪಿ ಪ್ರಕರಣಗಳು ಇವರುಗಳ ವಿರುದ್ಧ ದಾಖಲಾಗಿರುತ್ತವೆ.ಆಂಧ್ರಪ್ರದೇಶದಲ್ಲಿ 10, ಅಸ್ಸಾ 1, ಬಿಹಾರ 6, ಚಂಡೀಗಢ 1, ಛತ್ತೀಸ್ಗಢ 3, ದೆಹಲಿ 3, ಗುಜರಾತ್ 7, ಹರಿಯಾಣ 1, ಹಿಮಾಚಲ ಪ್ರದೇಶ 1, ಕರ್ನಾಟಕ 9, ಕೇರಳ 2, ಮಧ್ಯಪ್ರದೇಶ 1, ಮಹಾರಾಷ್ಟ್ರ 12, ಒಡಿಸ್ಸಾ 2, ಪಂಜಾಬ್ 4, ರಾಜಸ್ತಾನ 5, ತಮಿಳುನಾಡು 20, ತೆಲಂಗಾಣ 12, ಉತ್ತರಪ್ರದೇಶ 16, ಉತ್ತರಾಖಂಡ 3, ಪಶ್ಚಿಮ ಬಂಗಾಳ 3 ಮತ್ತು ಬೆಂಗಳೂರು ನಗರದ ಉತ್ತರ ಸಿಇಎನ್ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿರುತ್ತವೆ.
5
+ ಬಾಗಲಗುಂಟೆಯ ಟಿ. ದಾಸರಹಳ್ಳಿ ನಿವಾಸಿಯೊಬ್ಬರ ಮೊಬೈಲ್ಗೆ ಅಪರಿಚಿತ ವ್ಯಕ್ತಿಯು ವಾಟ್ಸಪ್ ಮೂಲಕ ಮೆಸೇಜ್ ಮಾಡಿ ಆನ್ಲೈನ್ ಜಾಬ್ ನೀಡುವುದಾಗಿ ನಂಬಿಸಿದ್ದಾನೆ. ನಂತರ ವಾಟ್ಸಪ್ ಮೂಲಕ ಅವರಿಗೆ ಕೆಲವು ಲಿಂಕ್ಗಳನ್ನು ಕಳುಹಿಸಿ, ಟೆಲಿಗ್ರಾಂ ಗ್ರೂಪ್ಗೆ ಸೇರ್ಪಡಿಸಿ, ಟಾಸ್ಕ್ಗಳನ್ನು ನೀಡಿದ್ದು, ಈ ಟಾಸ್ಕ್ನಲ್ಲಿ ಐಷಾರಾಮಿ ಹೋಟೆಲ್ಗಳ ರೀವ್ಯೂವನ್ನು ಮಾಡುವಂತೆ ತಿಳಿಸಿದ್ದಾನೆ.ರೀವ್ಯೂ ಮಾಡುವ ಸಮಯದಲ್ಲಿ 150 ರಿಂದ 200 ರೂ. ಹಣವನ್ನು ಸಲ್ಲಿಸಿ ರೀವ್ಯೂ ರಿಪೋರ್ಟ್ ಅನ್ನು ಕಳುಹಿಸಿದ್ದಲ್ಲಿ ಕೂಡಲೇ ಅಪರಿಚಿತ ವ್ಯಕ್ತಿಯು 400 ರಿಂದ 500 ರೂ. ಹಣವನ್ನು ಅಕೌಂಟ್ಗೆ ಹಾಕುತ್ತಿದ್ದನು.
6
+ ಇದೇ ರೀತಿ ಹಲವಾರು ರೀವ್ಯೂ ರಿಪೋರ್ಟ್ಗಳನ್ನು ತರಿಸಿಕೊಂಡು ಹೆಚ್ಚಿನ ಹಣವನ್ನು ಸಂದಾಯ ಮಾಡಿ, ನಂಬಿಕೆ ಬರುವಂತೆ ಅಪರಿಚಿತ ವ್ಯಕ್ತಿಯು ನಡೆದುಕೊಂಡಿದ್ದಾನೆ. ಕ್ರಿಪ್ರೋ ಕರೆನ್ಸಿ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಮಾಡಿದ್ದಲ್ಲಿ ಹೆಚ್ಚಿನ ಲಾಭ ಬರುವುದಾಗಿ ಅವರನ್ನು ನಂಬಿಸಿದ ವಂಚಕ ಹಂತಹಂತವಾಗಿ ಒಟ್ಟು 25,37,815 ರೂ.ಗಳನ್ನು ತನ್ನ ಅಕೌಂಟಿಗೆ ವರ್ಗಾಹಿಸಿಕೊಂಡಿದ್ದಾನೆ.ತದನಂತರದಲ್ಲಿ ತಾನು ಮೋಸ ಹೋಗಿರುವುದಾಗಿ ಅರಿತು ಸಿ.ಇ.ಎನ್. ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಪಿರ್ಯಾದುದಾರರು ದೂರು ನೀಡಿದ್ದಾರೆ.
7
+ ತನಿಖೆಯನ್ನು ಕೈಗೊಂಡ ಸೈಬರ್ಕ್ರೈಂ ಪೊಲೀಸರು ವಿವಿಧ ಬ್ಯಾಂಕ್ಗಳ ಅಕೌಂಟ್ಗಳಿಗೆ ಹಣವು ವರ್ಗಾವಣೆಯಾಗಿರುವ ಖಾತೆಗಳ ಖಾತೆದಾರರ ವಿವರಗಳನ್ನು ಸಂಪೂರ್ಣವಾಗಿ ಪಡೆದುಕೊಂಡು, ಈ ಜಾಲದಲ್ಲಿ ತೊಡಗಿಸಿಕೊಂಡಿದ್ದ ಒಟ್ಟು 10 ಮಂದಿಯ ಪೈಕಿ 7 ಮಂದ��ಯನ್ನು ಆರ್.ಟಿ.ನಗರದ 13ನೇ ಕ್ರಾಸ್ನ ಕಾಫಿಡೇ ಮುಂಭಾಗ ಮೊಬೈಲ್ಗಳು ಹಾಗೂ ಮೂರು ಬ್ಯಾಗ್ಗಳ ಸಮೇತ ವಶಕ್ಕೆ ಪಡೆದಿದ್ದಾರೆ.
8
+ ನಂತರ ಠಾಣೆಗೆ ಕರೆತಂದು ಮೂರು ಬ್ಯಾಗ್ಗಳನ್ನು ಪರಿಶೀಲಿಸಿ ಅದರಲ್ಲಿದ್ದ 99 ಡೆಬಿಟ್ ಕಾರ್ಡ್ಗಳು, 50 ಬ್ಯಾಂಕ್ ಪಾಸ್ ಪುಸ್ತಕಗಳು, 41 ಸಿಮ್ ಕಾರ್ಡ್ಗಳು, 1 ಲ್ಯಾಪ್ಟಾಪ್, 23 ಮೊಬೈಲ್ಫೋನ್ಗಳು ಹಾಗೂ 1.24 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.7 ಮಂದಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ, ತಲೆಮರೆಸಿಕೊಂಡಿರುವ ಇತರ ಮೂವರು ಸಹಚರರ ಬಗ್ಗೆ ಮಾಹಿತಿಯನ್ನು ನೀಡಿ, ಅವರು ಚೀನಾ ದೇಶಕ್ಕೆ ಹೋಗಿದ್ದು, ಚೀನಾದಲ್ಲಿ ಸೈಬರ್ ವಂಚಕರನ್ನು ಭೇಟಿ ಮಾಡಿ, ನಗರಕ್ಕೆ ವಾಪಸ್ಬಂದಿರುವುದಾಗಿ ತಿಳಿಸಿದ್ದಾರೆ.
9
+ ತನಿಖೆ ಮುಂದುವರೆಸಿ ತಲೆಮರೆಸಿಕೊಂಡಿದ್ದ ಮೂವರ ವಿರುದ್ಧ ಲುಕ್ಔಟ್ ನೋಟಿಸ್ (ಎಲ್.ಓ.ಸಿ) ಅನ್ನು ಹೊರಡಿಸಲಾಗಿತ್ತು.ನಂತರ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರನ್ನು ನಗರದ ವಿಮಾನನಿಲ್ದಾಣದ ಅಧಿಕಾರಿಗಳು ಅವರ ವಶಕ್ಕೆ ಪಡೆದು, ನಂತರ ಈ ಪ್ರಕರಣದ ತನಿಖಾಧಿಕಾರಿಯವರಿಗೆ ಹಸ್ತಾಂತರಿಸಿದ್ದಾರೆ. ವಶಕ್ಕೆ ಪಡೆದ ಈ ಮೂವರು ವ್ಯಕ್ತಿಗಳಿಂದ 6 ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.
10
+ ಒಟ್ಟು 10 ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ನೆಲಗದರನಹಳ್ಳಿ, ಪೀಣ್ಯಾ ಪೊಲೀಸ್ಠಾಣೆಯ ವ್ಯಾಪ್ತಿಯಲ್ಲಿ ಒಂದು ಕಛೇರಿಯನ್ನು ಹೊಂದಿದ್ದು, ಕಛೇರಿಯಲ್ಲಿ ಆರೋಪಿತನು ಕೃತ್ಯಕ್ಕೆ ಉಪಯೋಗಿಸಿದ 47 ಬ್ಯಾಂಕ್ ಪಾಸ್ ಬುಕ್ಗಳು, 48 ಸಿಮ್ ಕಾರ್ಡ್ಗಳು, 31 ಡೆಬಿಟ್ ಕಾರ್ಡ್ಗಳು, 9 ಮೊಬೈಲ್ ಫೋನ್ಗಳನ್ನು ಹಾಜರು ಪಡಿಸಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.
11
+ ಮೂವರು ಆರೋಪಿಗಳು ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಒಂದು ಪಿ.ಜಿ ಯಲ್ಲಿ ವಾಸವಾಗಿದ್ದು, ಪಿ.ಜಿ ಯಲ್ಲಿಟ್ಟಿದ್ದ 52 ಡೆಬಿಟ್ ಕಾರ್ಡ್ಗಳು, 34 ಮೊಬೈಲ್ ಫೋನ್ಗಳು, 40 ಸಿಮ್ಕಾರ್ಡ್ಗಳು, 1 ಲ್ಯಾಪ್ಟಾಪ್ ಹಾಗೂ 30 ಬ್ಯಾಂಕ್ ಪಾಸ್ ಬುಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
12
+ ಇತರೆ ಆರೋಪಿಗಳ ಮನೆಗಳನ್ನು ಶೋಧಿಸಲಾಗಿ, ಕೃತ್ಯಕ್ಕೆ ಬಳಸಿದ ಯಾವುದೇ ಉಪಯುಕ್ತ ಮಾಹಿತಿ, ವಸ್ತುಗಳು ಲಭ್ಯವಾಗಿಲ್ಲ.10 ಆರೋಪಿಗಳ ಪೈಕಿ 5 ಆರೋಪಿಗಳು ವಿವಿಧ ಎ.ಟಿ.ಎಂ ನಿಂದ ಹಣ ಪಡೆದಿದ್ದು ಆ ಎ.ಟಿ.ಎಂ ಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ.
13
+ ತನಿಖೆಯನ್ನು ಮುಂದುವರೆಸಿ, ಈ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 127 ವಿವಿಧ ಬ್ಯಾಂಕ್ ಪಾಸ್ ಪುಸ್ತಕಗಳ ಆಧಾರದ ಮೇಲೆ, ಒಟ್ಟು 7,34,768 ರೂ. ಗಳನ್ನು ಫ್ರೀಜ್ ಮಾಡಿ ತನಿಖೆ ಮುಂದುವರೆಸಿದ್ದಾರೆ.ಈ ಪ್ರಕರಣವನ್ನು ಸಿ.ಇ.ಎನ್. ಕ್ರೈಂ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಶಿವರತ್ನ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
eesanje/url_46_8_10.txt ADDED
@@ -0,0 +1,5 @@
 
 
 
 
 
 
1
+ ಸಿದ್ದರಾಮಯ್ಯ ಪ್ರಕರಣ ದಾಖಲಿಸಲು ಅಧಿಕಾರಿಗಳು ಹಿಂದೇಟು..
2
+ ಬೆಂಗಳೂರು, ಸೆ.26- ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಪ್ರಕರಣ ದಾಖಲಿಸಲು ಸಂಬಂಧ ಪಟ್ಟ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪಿನ ಪ್ರತಿಯನ್ನು ತಾವು ಮೈಸೂರು ಲೋಕಾಯುಕ್ತ ಪೊಲೀಸರಿಗೆ ತಲುಪಿಸಿದ್ದು, ಪ್ರಕರಣ ದಾಖಲಿಸಲು ಮೀನಾಮೇಷ ಎಣಿಸಲಾಗುತ್ತಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.
3
+ ಮೈಸೂರು ಲೋಕಾಯುಕ್ತದ ಎಸ್‌‍ಪಿ ಅವರು ಕೈಗೆ ಸಿಗುತ್ತಿಲ್ಲ. ಜೊತೆಗೆ ಯಾವ ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಲೋಕಾಯುಕ್ತದ ಹಿರಿಯ ಅಧಿಕಾರಿಗಳಿಗೂ ತಾವು ಕರೆ ಮಾಡಿ ಮಾಹಿತಿ ನೀಡಿದ್ದೇನೆ. ಆದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.ಇನ್ನೂ ಅರ್ಧಗಂಟೆ ಕಾಲ ಕಾಯುತ್ತೇನೆ ಅನಂತರವೂ ಅಧಿಕಾರಿಗಳು ಸ್ಪಂದಿಸದೆ ಇದ್ದರೆ, ಸಂಬಂಧ ಪಟ್ಟ ಪೊಲೀಸ್‌‍ ಠಾಣೆಗೆ ಲೋಕಾಯುಕ್ತ ಎಸ್‌‍ಪಿ ಕಾಣೆಯಾಗಿದ್ದಾರೆ ಎಂದು ದೂರು ನೀಡುತ್ತೇನೆ ಹಾಗೂ ನ್ಯಾಯಾಲಯದ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.
4
+ ಸ್ನೇಹಮಯಿ ಕೃಷ್ಣ ಅವರು ಇಂದು ಮೈಸೂರು ಲೋಕಾಯುಕ್ತ ಪೊಲೀಸ್‌‍ ಠಾಣೆ ಭೇಟಿ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಲಯದ ಆದೇಶದ ಪ್ರಕಾರ ಇಂದು ನಾಲ್ಕು ಪ್ರತ್ಯೇಕ ಕಾಯ್ದೆಗಳ ವಿವಿಧ ಕಲಂಗಳಡಿಯಲ್ಲಿ ಪ್ರಕರಣ ದಾಖಲಿಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಹಾಗೂ ಜಮೀನಿನ ಮಾಲೀಕ ದೇವರಾಜು ಹಾಗೂ ಇತರ ಅಧಿಕಾರಿ ವಿರುದ್ಧ ನಾವು ದೂರು ನೀಡಿದ್ದೇವೆ. ಅದರ ಪ್ರಕಾರವೇ ಪ್ರಕರಣ ದಾಖಲಿಸಬೇಕಿದೆ ಎಂದರು.
5
+ ಲೋಕಾಯುಕ್ತ ರಾಜ್ಯಸರ್ಕಾರದ ವ್ಯಾಪ್ತಿಯಲ್ಲಿದೆ. ಹಿಗಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದಾಗ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆೆಗೆ ಒಪ್ಪಿಸಬೇಕೆಂದು ಒಂದೆರೆಡು ದಿನಗಳಲ್ಲಿ ಹೈಕೋರ್ಟ್‌ ಮೆಟ್ಟಿಲೇರುವುದಾಗಿ ತಿಳಿಸಿದರು.
eesanje/url_46_8_11.txt ADDED
@@ -0,0 +1,7 @@
 
 
 
 
 
 
 
 
1
+ ಯಾವುದೇ ಕ್ಷಣದಲ್ಲಿ ಸಿಎಂ, ಕುಟುಂಬದ ವಿರುದ್ಧ ಎಫ್‌ಐಆರ್‌ ಸಾಧ್ಯತೆ
2
+ ಬೆಂಗಳೂರು, ಸೆ.26- ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದರಿಂದ ಯಾವುದೇ ಸಂದರ್ಭದಲ್ಲಿ ಸಿಎಂ ಮತ್ತು ಕುಟುಂಬದವರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗುವ ಸಾಧ್ಯತೆ ಇದೆ.
3
+ ಈಗಾಗಲೇ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಆದೇಶದ ಪ್ರತಿ ಲೋಕಾಯುಕ್ತ ಎಡಿಜಿಪಿಗೆ ತಲುಪಿದ್ದು, ಅಲ್ಲಿಂದ ಮೈಸೂರು ಎಸ್‌‍ಪಿಯವರಿಗೆ ರವಾನೆಯಾಗಿದ್ದು, ಅಧಿಕೃತವಾಗಿ ತನಿಖೆ ಆರಂಭವಾಗಲಿದೆ. ನ್ಯಾಯಾಲಯದ ಆದೇಶದ ಪ್ರತಿ ಬುಧವಾರ ವಿಳಂಬವಾಗಿ ತಲು ಪಿದ್ದರಿಂದ ಲೋಕಾಯುಕ್ತ ಎಡಿಜಿಪಿಯವರು ಗುರುವಾರ ಅದನ್ನು ಮೈಸೂರು ಲೋಕಾಯುಕ್ತ ಎಸ್‌‍ಪಿ ಉದೇಶ್‌ ಅವರಿಗೆ ಹಸ್ತಾಂತರ ಮಾಡಿದ್ದಾರೆ.
4
+ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ ಅವರು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಪ್ರತಿಯನ್ನು ತೆಗೆದುಕೊಂಡು ತೆರಳಿದ್ದಾರೆ. ಮೊದಲು ಇನ್‌ಸ್ಪೆಕ್ಟರ್‌ ಒಬ್ಬರನ್ನು ಕಳುಹಿಸಿದ್ದರಾದರೂ ನಂತರ ಅವರೇ ಬಂದು ಪಡೆದುಕೊಂಡಿದ್ದಾರೆ. ನ್ಯಾಯಾಲಯದ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಬಾಮೈದುನ, ಮಲ್ಲಿಕಾರ್ಜುನ ಸ್ವಾಮಿ ಜಮೀನು ಮಾಲೀಕ ದೇವರಾಜ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಲಿದ್ದಾರೆ.
5
+ ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲನೇ ಆರೋಪಿಯಾದರೆ ಪತ್ನಿ ಪಾರ್ವತಮ 2ನೇ ಆರೋಪಿಯಾಗಲಿದ್ದಾರೆ. ಸಿಆರ್‌ಪಿಸಿ ಸೆಕ್ಷನ್‌ 156(3)ರಡಿ ದೂರು ದಾಖಲಿಸಲು ನ್ಯಾಯಾಲಯ ಆದೇಶ ನೀಡಿದೆ. ಇದರ ಪ್ರಕಾರವೇ ಲೋಕಾಯುಕ್ತ ಎಸ್‌‍ಪಿ ಎಫ್‌ಐಆರ್‌ ದಾಖಲಿಸಲಿದ್ದಾರೆ. ನ್ಯಾಯಾಲಯವು ಐಪಿಸಿ ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಬೇನಾಮಿ ಪ್ರಾಪರ್ಟಿ ಟ್ರಾನ್ಸಕ್ಷನ್‌ ಕಾಯ್ದೆ ಹಾಗೂ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ತನಿಖೆ ನಡೆಸಲಿದ್ದಾರೆ.
6
+ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು 120ಬಿ 120ಬಿ – ಅಪರಾಧಿಕ ಒಳಸಂಚು, 166 – ಯಾವುದೇ ವ್ಯಕ್ತಿಗೆ ಹಾನಿ ಉಂಟು ಮಾಡುವ ಉದ್ದೇಶದಿಂದ ಸಾರ್ವಜನಿಕನೌಕರನು ಕಾನೂನು ಬದ್ದ ಆದೇಶ ಪಾಲಿಸದಿರುವುದು, 403 – ಸ್ವತ್ತಿನ ಅಪ್ರಮಾಣಿಕ ದುರುಪಯೋಗ, 406 – ಅಪರಾಧಿಕ ನಂಬಿಕೆದ್ರೋಹ, 420 – ವಂಚನೆ ಮಾಡುವುದು ಮತ್ತು ಸ್ವತ್ತನ್ನ ನೀಡಲು ಅಪ್ರಾಮಾಣಿಕವಾಗಿ ಪ್ರೇರೇಪಿಸುವುದು, 426 – ಕೇಡಿನ ಅಪರಾಧಕ್ಕಾಗಿ ದಂಡನೆ, 465 – ಖೋಟಾ ತಯಾರಿಕೆಗೆ ದಂಡನೆ, 468 – ವಂಚನೆಯ ಉದ್ದೇಶಕ್ಕಾಗಿ ಖೋಟಾ ತಯಾರಿಕೆ, 340 – ಅಕ್ರಮ ಬಂಧನ, 351 – ಹಲ್ಲೆ ಕಾನೂನುನಡಿ ತನಿಖೆ ನಡೆಯಲಿದೆ.ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988, ಪಿಸಿ ಆಕ್ಟ್‌ 9 – ಸಾರ್ವಜನಿಕ ಸೇವಕನ ಮೇಲೆ ಪ್ರಭಾವ ಬೀರುವ ಮೂಲಕ ಅನುಕೂಲತೆ ಸ್ವೀಕಾರದ ಅಪರಾಧದ ಬಗ್ಗೆ ತಿಳಿಸುತ್ತದೆ.
7
+ ಪಿಸಿ ಆಕ್ಟ್‌ 13 – ಸಾರ್ವಜ��ಿಕ ಸೇವಕನಿಂದ ಕ್ರಿಮಿನಲ್‌ ದುರ್ನಡತೆಯ ಬಗ್ಗೆ ವ್ಯವಹರಿಸುತ್ತದೆ, ಬೇನಾಮಿ ಪ್ರಾಪರ್ಟಿ ಟ್ರಾನ್ಸಾಕ್ಷನ್‌ ಆ್ಯಕ್ಟ್‌ -1988 ಸೆಕ್ಷನ್‌ 3 – ಬೇನಾಮಿ ವಹಿವಾಟುಗಳ ನಿಷೇಧ ಮತ್ತು ಪ್ರವೇಶಕ್ಕೆ ಶಿಕ್ಷೆ, ಸೆಕ್ಷನ್‌ 53 – ಬೇನಾಮಿ ದಂಡದ ಬಗ್ಗೆ ಹಾಗೂ ಸೆಕ್ಷನ್‌ 54 – ಸುಳ್ಳು ಮಾಹಿತಿ ನೀಡುವುದಕ್ಕೆ ದಂಡದ ಬಗ್ಗೆ ತಿಳಿಸುತ್ತದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ – 2011, ಸೆಕ್ಷನ್‌ 3 – ಎಲ್ಲಾ ರೀತಿಯ ಭೂಕಬಳಿಕೆ ನಿಷೇಧ ಮತ್ತು ಕಾನೂನು ಬಾಹಿರ, ಸೆಕ್ಷನ್‌ 4- ಯಾವುದೇ ವ್ಯಕ್ತಿ ಸ್ವತಃ ಅಥವಾ ಇನ್ನೊಬ್ಬ ವ್ಯಕ್ತಿಯ ಮೂಲಕ ಭೂ ಕಬಳಿಕೆ ಮಾಡುವಂತಿಲ್ಲ.
eesanje/url_46_8_12.txt ADDED
@@ -0,0 +1,4 @@
 
 
 
 
 
1
+ ಜಾಮೀನಿನ ಮೇಲೆ ಇರುವವರು ಮೊದಲು ರಾಜೀನಾಮೆ ನೀಡಲಿ: ಮಹದೇವಪ್ಪ
2
+ ಬೆಂಗಳೂರು, ಸೆ.26 – ಜಾಮೀನಿನ ಮೇಲೆ ಇರುವವರೆಲ್ಲಾ ಮೊದಲು ತಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಆನಂತರ ನೈತಿಕತೆ ಬಗ್ಗೆ ಮಾತನಾಡಲಿ ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ. ಮಹದೇವಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಅಷ್ಟಕ್ಕೂ ಸಿದ್ದರಾಮಯ್ಯ ಅವರು ಮಾಡಿರುವ ತಪ್ಪೇನು? ಎಂದು ಪ್ರಶ್ನಿಸಿದರು.
3
+ ಬಡಜನರ ಪರವಾಗಿ ಕೆಲಸ ಮಾಡಿದ್ದೇ ತಪ್ಪಾಯಿತೆ? ಕಾನೂನಾತಕ ಹಾಗೂ ರಾಜಕೀಯವಾಗಿ ಎಲ್ಲಾ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ ಎಂದು ಅವರು ಹೇಳಿದರು. ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ನೀಡಿರುವ ಹೇಳಿಕೆ ವ್ಯಕ್ತಿಗತ ಅಭಿಪ್ರಾಯ. ಅದು ಪಕ್ಷದ ಅಭಿಪ್ರಾಯವಲ್ಲ ಎಂದರು.
4
+ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಬಿಜೆಪಿಯವರು ಮೊದಲು ಅವರ ಮನೆ ಸರಿ ಮಾಡಿಕೊಳ್ಳಲಿ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌‍.ಈಶ್ವರಪ್ಪ ಅವರ ಮನೆಯಲ್ಲಿ ಏನು ನಡೆಯುತ್ತಿದೆ? ಪರ್ಯಾಯ ನಾಯಕತ್ವದ ಸಭೆ ನಡೆಯುತ್ತಿದೆ ಎಂದು ಆರೋಪಿಸಿದರು.
eesanje/url_46_8_2.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ರಾಜ್ಯಪಾಲರಿಗೆ ಅಗತ್ಯ ಮಾಹಿತಿ ನೀಡಲು ರಾಜ್ಯಸರ್ಕಾರದ ವಿರೋಧವಿಲ್ಲ : ಪರಮೇಶ್ವರ್
2
+ :
3
+ ಬೆಂಗಳೂರು,ಸೆ.27-ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಅಗತ್ಯ ಮಾಹಿತಿ ನೀಡಲು ರಾಜ್ಯಸರ್ಕಾರದ ವಿರೋಧವಿಲ್ಲ. ಆದರೆ ಸಂಪುಟದ ಗಮನಕ್ಕೆ ಬಂದು ವರದಿ ನೀಡುವುದರಿಂದ ಹೊಣೆಗಾರಿಕೆ ಹೆಚ್ಚಿರುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಎಲ್ಲಾ ಪತ್ರಗಳಿಗೂ ಉತ್ತರ ಕೊಡಲು ನಮ ಸರ್ಕಾರ ಸಿದ್ಧವಿದೆ. ಆದರೆ ಅದು ಸಂಪುಟದ ಗಮನಕ್ಕೆ ಬರಬೇಕಿದೆ.ಈ ಹಿಂದೆ ಅನೇಕ ಸಂದರ್ಭಗಳಲ್ಲಿ ಇಲಾಖೆಗಳಿಂದ ನೇರವಾಗಿ ಮಾಹಿತಿ ತೆಗೆದುಕೊಂಡು ಮುಖ್ಯಕಾರ್ಯದರ್ಶಿಯವರೇ ರಾಜ್ಯಪಾಲರಿಗೆ ವರದಿ ನೀಡಿರುವ ಉದಾಹರಣೆಗಳಿವೆ ಎಂದು ಹೇಳಿದರು.
5
+ ತೆರೆಮರೆಯಲ್ಲಿ ಯಾರೋ ಪತ್ರ ಬರೆಯುವುದು, ಯಾರೋ ಮಾಹಿತಿ ಪಡೆಯುವುದು ನಡೆಯುತ್ತಿದೆ. ಇದು ಸರಿಯಲ್ಲ. ಸಂಪುಟಕ್ಕೆ ಕಡತ ಮಂಡನೆಯಾದರೆ ಯಾವುದನ್ನು ರಾಜ್ಯಪಾಲರಿಗೆ ನೀಡಬೇಕು ಅಥವಾ ತಡೆಹಿಡಿಯಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತದೆ. ಸಂಪುಟದ ಗಮನಕ್ಕೆ ತಂದಾಗ ಮುಖ್ಯ ಕಾರ್ಯದರ್ಶಿಯವರು ಹೊಣೆಗಾರರಾಗುವುದಿಲ್ಲ. ಸರ್ಕಾರವೇ ಉತ್ತರದಾಯಿತ್ವವಾಗಿರುತ್ತದೆ ಎಂದರು.
6
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಮುಡಾ ಪ್ರಕರಣದ ಕುರಿತು ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆಡಳಿತ ಮಾಡುವವರು ಧರ್ಮ ಹಾಗೂ ನೈತಿಕತೆ ಪಾಲನೆ ಮಾಡಬೇಕು. ಇಲ್ಲವಾದರೆ ರಾವಣ ರಾಜ್ಯ ನಿರ್ಮಾಣವಾಗುತ್ತದೆ ಎಂದು ಉಲ್ಲೇಖಿಸಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಆಡಳಿತ ಮಾಡುವವರಷ್ಟೇ ಅಲ್ಲ, ಎಲ್ಲರೂ ಧರ್ಮಪಾಲನೆ ಮಾಡಬೇಕು ಎಂದರು.
7
+ ಕಾನೂನು ಮಾಡುವವರಿಗೆ ಒಂದು ಧರ್ಮ, ನ್ಯಾಯಾಧೀಶರುಗಳಿಗೆ ಒಂದು ಧರ್ಮ ಎಂದು ಇರುವುದಿಲ್ಲ. ಎಲ್ಲರೂ ಧರ್ಮಪಾಲನೆ ಮಾಡಿದಾಗ ರಾಮರಾಜ್ಯವಾಗುತ್ತದೆ ಎಂದು ತಿಳಿಸಿದರು.
8
+ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ನಾಯಕ. ಕೆ.ಬಿ.ಕೋಳಿವಾಡ ವೈಯಕ್ತಿಕವಾದ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್ನಲ್ಲಿ ಅವರು ಯಾವುದೇ ಸ್ಥಾನಮಾನ ಹೊಂದಿಲ್ಲ. ಈ ಹಿಂದೆ ವಿಧಾನಸಭೆಯ ಅಧ್ಯಕ್ಷರಾಗಿದ್ದರು. ಸದ್ಯಕ್ಕೆ ಅವರು ನೀಡಿರುವ ಅಭಿಪ್ರಾಯ ಪಕ್ಷಕ್ಕೆ ಸಂಬಂಧಪಟ್ಟಿದ್ದಲ್ಲ.ಕೆ.ಬಿ.ಕೋಳಿವಾಡರ ಹೇಳಿಕೆ ಹಿಂದೆ ಅನ್ಯರ ಪ್ರಭಾವ ಇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು.
9
+ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೋರಿ ಬಿಜೆಪಿಯವರು ಪ್ರತಿಭಟನೆ ನಡೆಸುವುದು ಹೊಸತೇನಲ್ಲ. ಆರಂಭದಿಂದಲೂ ಇದನ್ನೇ ಮಾಡುತ್ತಿದ್ದಾರೆ. ಈಗ ವೇಗ ಹೆಚ್ಚಿಸಿರಬಹುದು. ಎಕ್ಸಲ���ಟರ್ ಹೆಚ್ಚು ಒತ್ತಿದ್ದಾರೆ ಎನ್ನಿಸುತ್ತದೆ. ವಿರೋಧಪಕ್ಷಗಳಾಗಿ ಹೋರಾಟ ಮಾಡುವುದು ಅವರ ಧರ್ಮ ಎಂದು ಹೇಳಿದರು.
10
+ ಸಿಬಿಐ ತನಿಖೆಗೆ ನೀಡಲಾಗಿದ್ದ ಮುಕ್ತ ಅವಕಾಶವನ್ನು ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೆಹಲಿ ಪೊಲೀಸ್ ಕಾಯಿದೆಯ ಅಡಿಯಲ್ಲಿ ಸಿಬಿಐ ಅಧಿಕಾರಿಗಳು ನೇರವಾಗಿ ತನಿಖೆ ಮಾಡಲು ಅವಕಾಶವಿದೆ. ಆದರೆ ಅನೇಕ ಸಂದರ್ಭದಲ್ಲಿ ರಾಜ್ಯಸರ್ಕಾರಗಳು ತನಿಖೆಗೆ ಅವಕಾಶ ಮಾಡಿಕೊಟ್ಟಿವೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಪೂರ್ವಾನುಮತಿ ಪಡೆಯುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
11
+ ನಮ ರಾಜ್ಯದಲ್ಲಿ ನಾಲ್ಕೈದು ಬಾರಿ ನೇರವಾಗಿ ಸಿಬಿಐ ತನಿಖೆ ನಡೆಯುವಂತಿಲ್ಲ ಎಂದು ನಿರ್ಣಯ ಕೈಗೊಳ್ಳಲಾಗಿದೆ. ಹಿಂದಿನ ಸರ್ಕಾರ ನೇರ ತನಿಖೆಗೆ ಅವಕಾಶ ಮಾಡಿಕೊಟ್ಟಿತ್ತು. ನಮ ಸರ್ಕಾರ ಅದನ್ನು ಹಿಂಪಡೆದಿದೆ. ಇದು ಹೊಸದೂ ಅಲ್ಲ, ಆಶ್ಚರ್ಯ ಪಡುವಂತೆಯೂ ಇಲ್ಲ ಎಂದರು.
12
+ ಅನೇಕ ಪ್ರಕರಣಗಳಲ್ಲಿ ರಾಜ್ಯಸರ್ಕಾರದ ಗಮನಕ್ಕೆ ತರದೇ ನೇರವಾಗಿ ತನಿಖೆ ಮಾಡುವುದು ಸರಿಯಲ್ಲ ಎಂದ ಅವರು, ಸಂಪುಟದಲ್ಲಿ ನಿರ್ಣಯ ತೆಗೆದುಕೊಂಡ ಸಮಯ ಹಾಗೂ ಸಂದರ್ಭ ಸರಿಯಿಲ್ಲದೇ ಇರಬಹುದು. ಆದರೆ ನಮ ನಿರ್ಣಯ ಸರಿ ಇದೆ. ಇದು ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ತೆಗೆದುಕೊಂಡ ನಿರ್ಣಯವಲ್ಲ ಎಂದು ಹೇಳಿದರು.
13
+ ರಾಜಭವನದಿಂದ ಮಾಹಿತಿ ಸೋರಿಕೆಯಾಗುತ್ತಿದ್ದರೆ ಅದಕ್ಕೆ ರಾಜಭವನವೇ ಹೊಣೆಗಾರಿಕೆ. ಆ ಆವರಣದೊಳಗೆ ಯಾರಿಗೂ ಹೋಗಲು ಸಾಧ್ಯವಾಗುವುದಿಲ್ಲ. ಅತ್ಯುತ್ಕೃಷ್ಟವಾದ ಭದ್ರತಾ ವಲಯ ಎಂದು ಪರಿಗಣಿಸಿದ್ದೇವೆ. ರಾಜಭವನದಿಂದ ಅನೇಕ ಪತ್ರಗಳು ಬರುತ್ತಿವೆ. ಇದನ್ನು ತನಿಖೆ ಮಾಡಿ ಎಂದು ಪತ್ರ ಬರೆದರೆ ತನಿಖೆ ಮಾಡಲು ನಾವು ಸಿದ್ಧರಿದ್ದೇವೆ ಎಂದರು.ತನಿಖೆಗೆ ರಾಜ್ಯಪಾಲರು ಅನುಮತಿ ಕೊಟ್ಟರೆ ಪೊಲೀಸರು ತೆರಳಿ ರಾಜಭವನದ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಿ ಯಾರಿಂದ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಪತ್ತೆ ಹಚ್ಚುತ್ತಾರೆ ಎಂದು ಹೇಳಿದರು.
eesanje/url_46_8_3.txt ADDED
@@ -0,0 +1,7 @@
 
 
 
 
 
 
 
 
1
+ ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ
2
+ -
3
+ ತುಮಕೂರು, ಸೆ.27-ಪ್ರಯಾಣಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರು ಮತ್ತು ತುಮಕೂರು ನಡುವೆ ಸಂಚರಿಸುವ ವಿಶೇಷ ಮೆಮು ರೈಲಿಗೆ ಇಂದು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಚಾಲನೆ ನೀಡಿದರು.
4
+ ಕೇಂದ್ರ ಸಚಿವರಾದ ಬಳಿಕ ತುಮಕೂರು ಜಿಲ್ಲೆಗೆ ಹಲವಾರು ಹೊಸ ಹೊಸ ರೈಲ್ವೆ ಯೋಜನೆಗಳನ್ನು ಕೊಡುಗೆಗಳನ್ನಾಗಿ ಸಚಿವರು ನೀಡುತ್ತಿದ್ದು, ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮೆಮು ರೈಲಿಗೆ ಹಸಿರು ನಿಶಾನೆ ನೀಡಿದ್ದಾರೆ.
5
+ ಇದರಿಂದ ಬಸ್‌‍ಗಳಲ್ಲಿ ಒತ್ತಡ ಕಡಿಮೆಯಾಗಲಿದೆ. ಪ್ರತಿನಿತ್ಯ ಕೆಲಸ, ವ್ಯಾಪಾರ ಸೇರಿದಂತೆ ಮತ್ತಿತರ ಕಾರಣಗಳಿಗಾಗಿ ಪ್ರತಿನಿತ್ಯ ಸಾವಿರಾರು ಮಂದಿ ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಸಮಯಕ್ಕೆ ಸರಿಯಾಗಿ ಕೆಲಸ ಕಾರ್ಯಗಳಿಗೆ ತೆರಳಲು ಅನುಕೂಲವಾಗುವಂತೆ ಈ ಮೆಮು ರೈಲನ್ನು ಬಿಡಲಾಗಿದೆ.
6
+ ಈ ಹೊಸ ರೈಲು ಭಾನುವಾರ ಹೊರತುಪಡಿಸಿ ಆರು ದಿನವೂ ಸಂಚರಿಸಲಿದೆ. ತುಮಕೂರು ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 8.45ಕ್ಕೆ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ.ಮತ್ತೆ ಈ ರೈಲು ಸಂಜೆ 5.40ಕ್ಕೆ ಯಶವಂತಪುರದಿಂದ ಹೊರಟು 7.15ಕ್ಕೆ ತುಮಕೂರು ತಲುಪಲಿದೆ. ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಸೋಮಣ್ಣ ಅವರು ತಿಳಿಸಿದರು.
7
+ ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿ ಗಣೇಶ, ಸುರೇಶ್‌ ಗೌಡ, ಮಾಜಿ ಸಂಸದ ಜಿ.ಎಸ್‌‍. ಬಸವರಾಜ್‌ ಸೇರಿದಂತೆ ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
eesanje/url_46_8_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಿಎಂ ವಿರುದ್ಧ ಎಫ್‌‍ಐಆರ್‌‍ ದಾಖಲಿಸುವ ವಿಷಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಗೊಂದಲ
2
+
3
+ ಬೆಂಗಳೂರು,ಸೆ.27-ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಅಧಿಕಾರಿಗಳಿಗೆ ಎಫ್‌‍ಐಆರ್‌‍ ದಾಖಲಿಸುವ ವಿಷಯದಲ್ಲಿ ಗೊಂದಲ ಉಂಟಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಸೆಕ್ಷನ್‌‍ 156(3)ರಡಿ ಎಫ್‌‍ಐಆರ್‌‍ ದಾಖಲಿಸಿ ಮೂರು ತಿಂಗಳೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿತ್ತು.
4
+ ಇದರಂತೆ ಮೈಸೂರು ಲೋಕಾಯುಕ್ತ ಎಸ್‌‍ಪಿ ಉದೇಶ್‌‍ ಅವರು ಗುರುವಾರ ಬೆಂಗಳೂರಿನ ಕೇಂದ್ರ ಕಚೇರಿಗೆ ಆಗಮಿಸಿ ಲೋಕಾಯುಕ್ತ ಎಡಿಜಿಪಿ ಮನೀಶ್‌‍ ಕರ್ಬಿಕರ್‌‍ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ನ್ಯಾಯಾಲಯದ ಪ್ರತಿಯನ್ನು ಪಡೆದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಹೊಸ ಕಾಯ್ದೆ ಬಿಎನ್‌‍ಎಸ್‌‍ಎಸ್‌‍ ಇಲ್ಲವೇ ಸಿಆರ್‌‍ಪಿಸಿ ಸೆಕ್ಷನ್‌‍ನಡಿ ದೂರು ದಾಖಲಿಸಬೇಕೇ? ಎಂಬ ಗೊಂದಲದಲ್ಲಿ ಸಿಲುಕಿರುವುದರಿಂದಲೇ ಎಫ್‌‍ಐಆರ್‌‍ ದಾಖಲಿಸಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.
5
+ ಬಿಎನ್‌‍ಎಸ್‌‍ಎಸ್‌‍ ಅಥವಾ ಸಿಆರ್‌‍ಪಿಸಿ ಅಡಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ, ಜಮೀನು ಮಾಲೀಕ ದೇವರಾಜ್‌‍ ಸೇರಿದಂತೆ ಯಾವ ಸೆಕ್ಷನ್‌‍ನಡಿ ದೂರು ದಾಖಲಿಸಬೇಕು ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಲೋಕಾಯುಕ್ತ ಎಡಿಜಿಪಿ ಮನೀಶ್‌‍ ಕರ್ಬಿಕರ್‌‍ಗೆ ಮೈಸೂರು ಲೋಕಾಯುಕ್ತ ಎಸ್‌‍ಪಿ ಉದೇಶ್‌‍ ಪತ್ರ ಬರೆದಿದ್ದಾರೆ.
6
+ ಲೋಕಾಯುಕ್ತರ ಈ ಪತ್ರಕ್ಕೆ ಸೂಕ್ತ ಉತ್ತರ ಬಂದ ಮೇಲೆ ಎಫ್‌‍ ಐ ಆರ್‌‍ ದಾಖಲು ಪ್ರಕಿಯೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಹ ಎಫ್‌‍ ಐ ಆರ್‌‍ ದಾಖಲಾಗುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ.
7
+ ಪ್ರಕರಣವು ಬಿಎನ್‌‍ಎಸ್‌‍ಎಸ್‌‍ ಕಾಯ್ದೆ ಜಾರಿಯಾಗುವ ಮುನ್ನವೇ ನಡೆದಿದೆ. ಇದೊಂದು ಹಿಂದಿನ ಪ್ರಕರಣವಾಗಿರುವುದರಿಂದ ಸಿಆರ್‌‍ಪಿಸಿ ಅಡಿ ಎಫ್‌‍ಐಆರ್‌‍ ದಾಖಲಿಸಿ ತನಿಖೆ ನಡೆಸಬೇಕೇ? ಇಲ್ಲವೇ ಹೊಸ ಕಾನೂನಿನ ಅನ್ವಯ ತನಿಖೆ ನಡೆಸಬೇಕೆ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
8
+ ಈ ಕುರಿತು ಲೋಕಾಯುಕ್ತ ಹಿರಿಯ ಅಧಿಕಾರಿಗಳು ಕಾನೂನು ತಜ್ಞರ ಮೊರೆ ಹೋಗಿದ್ದು, ಯಾವ ಸೆಕ್ಷನ್‌‍ ನಡಿ ನ್ಯಾಯಾಲಯದ ಆದೇಶದಂತೆ ದೂರು ದಾಖಲಿಸಬೇಕು ಎಂಬುದರ ಬಗ್ಗೆ ಸಲಹೆ ಪಡೆಯಲಿದ್ದಾರೆ. ಈ ಬೆಳವಣಿಗೆಗಳಿಂದಾಗಿಯೇ ಸಿಎಂ ವಿರುದ್ಧ ಎಫ್‌‍ಐಆರ್‌‍ ದಾಖಲಿಸುವ ಪ್ರಕ್ರಿಯೆ ವಿಳಂಬವಾಗಿದ್ದು, ಮೂಲಗಳ ಪ್ರಕಾರ ಇಂದು ಕೂಡ ಎಫ್‌‍ಐಆರ್‌‍ ದಾಖಲಾಗುವ ಸಾಧ್ಯತೆ ಇಲ್ಲ ಎಂದು ತಿಳಿದುಬಂದಿದೆ.
9
+ ಕಾನೂನು ತಜ್ಞರು ನೀಡುವ ಅಭಿಪ್ರಾಯವನ್ನು ಆಧರಿಸಿ ಸಿಆರ್‌‍ಪಿಸಿ ಇಲ್ಲವೇ ಹೊಸದಾಗಿ ಬಂದಿರುವ ಬಿಎನ್‌‍ಎಸ್‌‍ಎಸ್‌‍ ��ಾನೂನಿನಡಿ ಪ್ರಕರಣ ದಾಖಲಿಸಿ ನಂತರವೇ ಎಫ್‌‍ಐಆರ್‌‍ ದಾಖಲು ಮಾಡಿಕೊಳ್ಳಲಿದ್ದಾರೆ.
10
+ ಹಳೆಯ ಸಿಆರ್‌‍ಪಿಸಿ ಕಾಯ್ದೆಯಡಿ ದೂರು ದಾಖಲಿಸಿಕೊಂಡರೇ ಆಗ ಕೂಡಲೇ ಎಫ್‌‍ಐಆರ್‌‍ ದಾಖಲು ಮಾಡಬೇಕಾಗುತ್ತದೆ. ಆದರೆ, ಪ್ರಸ್ತುತ ಜಾರಿಯಲ್ಲಿರುವ ನೂತನ ಬಿಎನ್‌‍ಎಸ್‌‍ಎಸ್‌‍ ಕಾಯ್ದೆಯಡಿ ದೂರು ದಾಖಲಾದರೆ, ಮೊದಲು ನೋಟಿಸ್‌‍ ಜಾರಿಗೊಳಿಸಿ ಅವರಿಂದ ಉತ್ತರ ಪಡೆದ ನಂತರ ಎಫ್‌‍ಐಆರ್‌‍ ದಾಖಲಿಸಬೇಕಾಗುತ್ತದೆ. ಹಾಗಾಗಿ ಇದೀಗ ಲೋಕಾಯುಕ್ತರು ಗೊಂದಲದಲ್ಲಿದ್ದು ಹಳೆಯ ಸಿಆರ್‌‍ಪಿಸಿ ಕಾಯ್ಡೆಯಡಿ ದೂರು ದಾಖಲಿಸಬೇಕೋ ಅಥವಾ ಹೊಸ ಬಿಎನ್‌‍ಎಸ್‌‍ಎಸ್‌‍ ಕಾಯ್ದೆಯಡಿ ದೂರು ದಾಖಲಿಸಬೇಕೋ ಎಂಬುದರಲ್ಲಿ ಗೊಂದಲ ಇದೆ.
eesanje/url_46_8_5.txt ADDED
@@ -0,0 +1,8 @@
 
 
 
 
 
 
 
 
 
1
+ ಕೋರ್ಟ್‌ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ ಈಶ್ವರ ಖಂಡ್ರೆ ಸೂಚನೆ
2
+
3
+ ಬೆಂಗಳೂರು, ಸೆ.27-ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾವಲು ಪ್ರದೇಶದ ಸರ್ವೆ ನಂ.1ರಿಂದ 22ರವರೆಗಿನ 301.07 ಎಕರೆ ಕಿರು ಅರಣ್ಯ ಭೂಮಿಯನ್ನು ನ್ಯಾಯಾಲಯದ ಆದೇಶದಂತೆ ಮರಳಿ ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
4
+ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ರಾಮಕೃಷ್ಣೇಗೌಡ ಎಂಬುವವರು 2000ದಲ್ಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಡಬ್ಲ್ಯು.ಪಿ. 11835/2000)ಗೆ ಸಂಬಂಧಿಸಿದಂತೆ ಕೋರ್ಟ್‌ 2009ರಲ್ಲಿಯೇ ಎಲ್ಲ ಅನಧಿಕೃತ ಮಂಜೂರಾತಿಯನ್ನು ರದ್ದು ಮಾಡಿಸಿ, ಭೂಮಿಯನ್ನು ಯಥಾವತ್‌ ಅರಣ್ಯವಾಗಿ ಉಳಿಸಲು ತೀರ್ಪಿತ್ತಿದ್ದರೂ ಕ್ರಮ ವಹಿಸದ ಕಾನೂನು ವಿಭಾಗದ ಎಲ್ಲ ಎಪಿಸಿಸಿಎಫ್‌ಗಳು ಮತ್ತು ಹಾಸನ ಡಿಸಿಎಫ್‌ಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
5
+ ಈ ಸಂಬಂಧ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಟಿಪ್ಪಣಿಯಲ್ಲಿ ಸಚಿವರು ಸದರಿ ಜಮೀನನ್ನು ವಶಕ್ಕೆ ಪಡೆಯಲು ಕ್ರಮ ವಹಿಸಲು ಮತ್ತು ನಿರ್ಲಕ್ಷ್ಯ ಹಾಗೂ ಕರ್ತವ್ಯಲೋಪ ಎಸಗಿರುವ ಎಲ್ಲ ಎಪಿಸಿಸಿಎಫ್‌ಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌‍ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.
6
+ 1940ರ ಜನವರಿ 15ರಂದು ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾಲು ಪ್ರದೇಶವನ್ನು ಕಿರು ಅರಣ್ಯ ಎಂದು ಅಂದಿನ ಮಹಾರಾಜರ ಆಳ್ವಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಸದರಿ ಕಿರು ಅರಣ್ಯ ಜಮೀನನ್ನು ಅಕ್ರಮವಾಗಿ ದರಕಾಸ್ತು ಮಂಜೂರು ಮಾಡಲಾಗಿತ್ತು. ಈ ವಿರುದ್ಧ ರಾಮಕೃಷ್ಣೇಗೌಡ ಬಿನ್‌ ಏರೇಗೌಡ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
7
+ ಅಂದಿನ ಮುಖ್ಯ ನ್ಯಾಯಮೂರ್ತಿ ಪಿ.ಡಿ. ದಿನಕರನ್‌ ಮತ್ತು ಮೋಹನ ಶಾಂತನಗೌಡರ್‌ ಅವರಿದ್ದ ವಿಭಾಗೀಯ ಪೀಠ 2009ರ ನ. 6ರಂದು ಎಲ್ಲಾ ದರಕಾಸ್ತು ಮಂಜೂರಾತಿಗಳನ್ನು ರದ್ದು ಮಾಡಿ ಕಗ್ಗಲಿ ಕಾವಲು ಸರ್ವೆ ನಂ.1ರಿಂದ 22ರವರೆಗಿನ 331.07 ಎಕರೆ ಪ್ರದೇಶವನ್ನು ಯಥಾವತ್‌ ಅರಣ್ಯವಾಗಿ ಉಳಿಸುವಂತೆ ಆದೇಶ ನೀಡಿತ್ತು.
8
+ ಬಳಿಕ ಹಾಸನ ಜಿಲ್ಲೆಯ ಕೆಲವು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಚನ್ನರಾಯಪಟ್ಟಣ ತಹಶೀಲ್ದಾರರಿಗೆ ಪತ್ರ ಬರೆದಿರುವುದನ್ನು ಬಿಟ್ಟರೆ ಈ ಭೂಮಿಯನ್ನು ಮರಳಿ ವಶಕ್ಕೆ ಪಡೆದು ಅರಣ್ಯ ಬೆಳೆಸುವ ಪ್ರಯತ್ನವನ್ನೇ ಮಾಡದಿರುವ ಬಗ್ಗೆ ಅರಣ್ಯ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ
eesanje/url_46_8_6.txt ADDED
@@ -0,0 +1,4 @@
 
 
 
 
 
1
+ ರಾಜಾರೋಷವಾಗಿ ರಾಜೀನಾಮೆ ನೀಡಿ : ಜಗ್ಗೇಶ್‌
2
+ ಬೆಂಗಳೂರು,ಸೆ.26- ಸಿಎಂ ಸಿದ್ದರಾಮಯ್ಯ ಬಹಳ ಕ್ಲೀನ್‌ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್‌ನಲ್ಲಿ ತುಂಬಿ ಹೋಗಿದೆ. ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ ಎಂದು ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್‌ ಒತ್ತಾಯಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮಾಡಿದ್ದು ತಪ್ಪು ಎಂದು ನ್ಯಾಯಾಲಯ ಕೂಡ ಹೇಳಿದೆ. ಆದರೂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ಮುಡಾ ಹಗರಣ ಮೂಲಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಘನವಾದ ಹೆಸರು ತಂದುಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
4
+ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿಗೆ ತಾವು ಹಿಡಿದಿದ್ದ ಸಂವಿಧಾನ ಪುಸ್ತಕದಲ್ಲಿಎಷ್ಟು ಪುಟ ಇದೆ ಎಂದು ಹೇಳಲು ಆಗಲಿಲ್ಲ. ಅಂತಹವರನ್ನು ಪ್ರಧಾನಿ ಮಾಡಲು ಹೊರಟಿದ್ದಾರೆ. ಅಂತಹ ನಾಯಕನ ಕೆಳಗೆ ಇರುವ ಸಿದ್ದರಾಮಯ್ಯ ಘನವಾದ ಕೆಲಸ ಮಾಡಿದ್ದಾರೆ. ರಾಜ್ಯದ ಮಾನ ಮರ್ಯಾದೆ ಈಗಾಗಲೆ ಹರಾಜಾಗಿದೆ. ರಾಜೀನಾಮೆ ಕೊಡಿ, ನಿರ್ದೋಷಿಯಾಗಿ ಹೊರಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.
eesanje/url_46_8_7.txt ADDED
@@ -0,0 +1,9 @@
 
 
 
 
 
 
 
 
 
 
1
+ ಅವರಿಗೆ ಒಂದು ನ್ಯಾಯ, ನಿಮಗೊಂದು ನ್ಯಾಯನಾ.?: ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
2
+ ವಿಜಯಪುರ ; ಸನ್ಮಾನ್ಯ ಸಿದ್ದರಾಮಣ್ಣ ನವರೇ ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ ತನಿಖೆಗೆ ಹೋಗಬೇಕು, ರಾಜೀನಾಮೆ ಕೊಡಬೇಕೆಂದು ಆಗ್ರಹ ಮಾಡಿದ್ರಿ, ಅವರಿಗೆ ಒಂದು ನ್ಯಾಯ, ನಿಮಗೊಂದು ನ್ಯಾಯನಾ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.
3
+ ಈ ಕುರಿತು ವಿಜಯಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು :ಮೂಡಾ ಹಗರಣದಲ್ಲಿ ಸ್ವತಃ ಈ ರಾಜ್ಯದ ಸಿಎಂ ಭಾಗಿ ಆಗಿದ್ದಾರೆ. ಸುಳ್ಳು ದಾಖಲಾತಿ ಸೃಷ್ಟಿ ಮಾಡಿ ಇವತ್ತು ಏನು ಮಾಡಿದ್ದಾರೆ ಗೊತ್ತಿದೆ. ಸಿದ್ದರಾಮಣ್ಣನವರು ಹಿರಿಯರಿದ್ದಾರೆ. ಅನುಭವಿಗಳಿದ್ದಾರೆವಕೀಲರಿದ್ದಾರೆ. ಯಡ್ಡಿಯೂರಪ್ಪ ಸಾಹೇಬ್ರ ಮೇಲೆ ಆರೋಪ ಬಂದಾಗ ನೀವು ಆರೋಪ ಮುಕ್ತವಾಗಿ ಬರುವವರೆಗೂ ರಾಜಿನಾಮೆ ಕೊಡಿ ಅಂತಾ ಹೇಳಿದ್ರು..
4
+ ರಾಜಿನಾಮೆ ಕೊಟ್ಟು ತನಿಖೆಗೆ ಸಹಕರಿಸಿ: ಆದರೆ ಇವತ್ತು ಅವರಿಗೆ ಒಂದು ನ್ಯಾಯ. ಇವರಿಗೊಂದು ನ್ಯಾಯ ಅಂತಾ ಹೇಳುತ್ತಿರುವುದು ಸರಿಯಲ್ಲ ಸಾರ್ವಜನಿಕ ಬದುಕಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಾ ಅವರು ಬಂದಿದ್ದಾರೆ… ತನಿಖೆ ಪಾರದರ್ಶಕವಾಗಿ ನಡೆಯಬೇಕು ಅಂದ್ರೆ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಅವರು ಆಗ್ರಹಿಸಿದರು.
5
+ ನಾವು ಪಾದಯಾತ್ರೆ ಮಾಡಿದ್ದು ಯಾವುದೋ ಒಂದು ವ್ಯಕ್ತಿಯ ಮೇಲಿನ ದ್ವೇಷದಿಂದ ಅಲ್ಲ.. ರಾಜ್ಯದ ಸಂಪತ್ತು ಲೂಟಿ ಆದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಲಾಗಿತ್ತು… ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಈ ವಿಚಾರವಾಗಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.
6
+ ರಾಜ್ಯದ ಜನತೆ ಪ್ರಶ್ನೆಗೆ ಉತ್ತರ ಕೊಡಿ: ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು. ಕುಮಾರಸ್ವಾಮಿ ಮೊದಲು ರಾಜಿನಾಮೆ ಕೊಡಲಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು ; ಇದೆಲ್ಲ ಹಳೆ ಕಥೆ ಬಿಟ್ಟು ಇದೇನು ಹೊಸದೇನಲ್ಲ… ಮೈನಿಂಗ್ ದು ಹಳೆ ಕಥೆ.. ಇದನ್ನ ತಿರುಚೋದು ಬೇಡ… ರಾಜ್ಯದ ಜನತೆ ಕೇಳುತ್ತಿರುವ ಪ್ರಶ್ನೆಗೆ ಅವರು ಉತ್ತರಿಸಲಿ ಅಷ್ಟೇ. ಹೀಗಾಗಿ ರಾಜ್ಯದ ಜನತೆ ಕೇಳುವ ಪ್ರಶ್ನೆಗೆ ಮೊದಲು ಅವರು ಉತ್ತರಿಸಲಿ ಎಂದ ಕಿಡಿಕಾರಿದರು.
7
+ ನಮ್ಮ ಮೇಲೆ ಸುಳ್ಳು ದಾಖಲೆ ಹುಡುಕುವುದರಲ್ಲಿ ಕಾಂಗ್ರೆಸ್ ಸಮಯ ಕಳೆಯುತ್ತಿದ್ದಾರೆ.ಜನ 136 ಶಾಸಕರನ್ನ ಗೆಲ್ಲಿಸಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟಿದ್ದಾರೆ. ಪಾದಯಾತ್ರೆ ಯಶಸ್ಸು ಇವರಿಗೆ ಸಹಿಸಲಾಗುತ್ತಿಲ್ಲ.ಆಡಳಿತ ಪಕ್ಷ ವಿರೋಧ ಪಕ್ಷಕ್ಕೆ ಪ್ರಶ್ನೆ ಕೇಳುವಂತ ಸನ್ನಿವೇಶ ಈ ರಾಜ್ಯ ದ ಇತಿಹಾಸದಲ್ಲಿ ಮೊದಲು ಎಂದು ಕಿಡಿಕಾರಿದರು.
8
+ ದೇವೇಗೌಡರ ಕೊಡುಗೆ ಅಪಾರ; ದೇವೇಗೌಡರು ಪ್ರಧಾನ ಮಂತ್ರಿಗಳಾದ ಸಂದರ್ಭದಲ್ಲಿ ಆಲಮಟ್ಟಿ ಜಲಾಶಯಕ್ಕೆ ಸಾವಿರ ಕೋಟಿ ಅ��ುದಾನ ಕೊಟ್ಟಿರುವುದು ಇವತ್ತಿಗೂ ಮರೆಯುವುದಕ್ಕೆ ಆಗಲ್ಲ, ಈ ಭಾಗದ ಜನತೆಯ ಹೃದಯದಲ್ಲಿ ದಟ್ಟವಾಗಿ ನಿಂತಿದೆ ಎಂದರು.ಇವೆಲ್ಲವನ್ನು ನೋಡಿದಾಗ ಇಲ್ಲಿರುವ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜನತಾದಳ ಪಕ್ಷ ಅತ್ಯಂತ ಪ್ರಭಾವ ಶಾಲಿಯಾಗಿ ಮುಂಬರುವ ಚುನಾವಣೆಯಲ್ಲಿ ನಾಲ್ಕಕ್ಕೆ ನಾಲ್ಕು ಕ್ಷೇತ್ರಗಳನ್ನು ಗೆಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
9
+ ಕಾನೂನುನಿಗಿಂತ ದೊಡ್ಡವರು ಇಲ್ಲ: ಜಮೀರ್ ಅಹಮದ್ ಬಳ್ಳಾರಿ ಉಸ್ತುವಾರಿ ಎನ್ನುವ ಕಾರಣಕ್ಕೆ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರಕ್ಕೆ ಮಾತನಾಡಿದ ಅವರು ; ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಎಷ್ಟೇ ಬಲಿಷ್ಠ, ಪ್ರಭಾವಿಗಳಿದ್ದರು ಈ ನೆಲದ ಕಾನೂನಿಗೆ ತಲೆಬಾಗಬೇಕು. ಅಂತಿಮವಾಗಿ ಕಾನೂನು ಇದೆ.ಕೋರ್ಟ್ ಇದೆ ಸೂಕ್ತ ಕ್ರಮ ಕೈಗೊಳ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.
eesanje/url_46_8_8.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜೀನಾಮೆ ನೀಡಿ ನೈತಿಕತೆ ಪ್ರದರ್ಶಿಸಿ : ಸಿಎಂಗೆ ಅಶೋಕ್‌ ಸವಾಲು
2
+ ಬೆಂಗಳೂರು,ಸೆ.26- ಕಾಂಗ್ರೆಸ್‌‍ ಹೈಕಮಾಂಡ್‌ಗೆ ದಮು , ತಾಕತ್ತು ಇದ್ದರೆ ಮುಡಾ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯನ್ನು ತಕ್ಷಣವೇ ಪಡೆದು ನೈತಿಕತೆ ಪ್ರದರ್ಶನ ಮಾಡಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಬಹಿರಂಗ ಸವಾಲು ಹಾಕಿದ್ದಾರೆ.
3
+ ಮುಡಾ ಪ್ರಕರಣ ಸಂಬಂಧ ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಉಳಿಸಿಕೊಂಡಿದ್ದರೆ ಮೊದಲು ಸಿದ್ದರಾಮಯ್ಯನವರ ರಾಜೀನಾಮೆ ಪಡೆಯಲಿ. ಇಲ್ಲದಿದ್ದರೆ ಕಾಂಗ್ರೆಸ್‌‍ ಪಕ್ಷ ಭ್ರಷ್ಟಾಚಾರದ ಜೊತೆ ರಾಜೀ ಮಾಡಿಕೊಂಡಿದೆ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಎಸೆದರು.
4
+ ಹಿಂದೆ ನಮ ಪಕ್ಷದ ಹಿರಿಯರಾದ ಯಡಿಯೂರಪ್ಪನವರ ವಿರುದ್ಧ ಎಫ್‌ಐಆರ್‌ ದಾಖಲಾದಾಗ ಇದೇ ಸಿದ್ದರಾಮಯ್ಯ ಏನೇನು ಮಾತನಾಡಿದರು ಎಂಬುದನ್ನು ಒಂದು ಬಾರಿ ಆತಾವಲೋಕನ ಮಾಡಿಕೊಳ್ಳಲಿ. ಅಂದು ರಾಜೀನಾಮೆಗೆ ಒತ್ತಾಯಿಸಿದ್ದ ಇವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.
5
+ ಸಿದ್ದರಾಮಯ್ಯ ಅವರಿಗೆ ಈಗ ಬೇರೆ ಆಯ್ಕೆಗಳೇ ಇಲ್ಲ. ಹೈಕೋರ್ಟ್‌ ಆದೇಶ ಬಂದಿದೆ. ಯಾವ ಸೆಕ್ಷನ್‌ನಡಿ ತನಿಖೆಯಾಗಬೇಕು ಎಂಬುದನ್ನೂ ಹೇಳಿದೆ. ಸೆಕ್ಷನ್‌ 420ರಡಿ ದೂರು ದಾಖಲಿಸಲಾಗಿದೆ. ಎಫ್‌ಐಆರ್‌ ಅಗಿದ್ಯಾ? ರಾಜೀನಾಮೆ ಕೊಡೋಕೆ ಎಂದು ಪ್ರಶ್ನಿಸುತ್ತಿದ್ದರು. ಇವತ್ತು ಎಫ್‌ಐಆರ್‌ ಆಗಲಿದೆ. ಇದಕ್ಕಿಂತ ಇನ್ನೇನು ಬೇಕು? ಎಂದು ಪ್ರಶ್ನಿಸಿದರು. ಹಿಂದೆ ಯಡಿಯೂರಪ್ಪ ಅವರು ಲೋಕಾಯುಕ್ತ ತನಿಖೆ ಆಗುವಾಗ ಯಾವ ಹೇಳಿಕೆ ಕೊಟ್ಟಿದ್ದೀರಿ? ಯಡಿಯೂರಪ್ಪ ಕೇಸ್‌‍ ಬೇರೆ, ನಮ ಕೇಸ್‌‍ ಬೇರೆ ಅಂತೀರಿ. ಈಶ್ವರಪ್ಪ ಕೇಸ್‌‍ ಆದಾಗ ಏನ್‌ ಹೇಳಿದ್ದೀರಿ? ತನಿಖೆ ಆಗಿತ್ತಾ? ಆಗ.. ಈಶ್ವರಪ್ಪ ರಾಜೀನಾಮೆಗೆ ಕುಸ್ತಿ ಮಾಡಿದ್ದೀರಿ. ಈಗ ಯಾಕೆ ಮಾಡುತ್ತಿಲ್ಲ ಎಂದು ಪ್ರಶ್ನೆ ಹಾಕಿದರು.
6
+ ಮೋದಿ ಅವರು ಹೇಳಿದ್ದರೇ ನಿಮಗೆ ಮುಡಾದಲ್ಲಿ ಸೈಟ್‌ ತಗೊಳ್ಳೋಕೆ? ವಾಲೀಕಿ ಹಗರಣದಲ್ಲಿ ಎಸ್‌‍ಟಿಗಳ ಹಣ ದುರುಪಯೋಗ ಆಗಿರುವುದನ್ನು ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. ಅಭಿವೃದ್ಧಿಯಲ್ಲಿ ನಿಮಗೆ ಕಾಸು ಬರುತ್ತಿಲ್ಲ. ರಾಜೀನಾಮೆ ಕೊಡಬೇಕು ಎಂದು ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರೇ ಹೇಳಿದ್ದಾರೆ. ಕೋಳಿವಾಡ ಅವರು ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಟವೆಲ್‌ ಹಾಕಿಕೊಂಡು 7 ಜನ ಕಾಯುತ್ತಿದ್ದಾರೆ. ರಾಹುಲ್‌ ಗಾಂಧಿ ಅವರೇ ಸಂವಿಧಾನ ಪುಸ್ತಕ ಕೈನಲ್ಲಿ ಹಿಡಿಕೊಂಡು, ನಮಗೆಲ್ಲಾ ಪಾಠ ಮಾಡಿದ್ರಲ್ಲಾ? ಈಗ ರಾಜೀನಾಮೆ ಪಡೆದುಕೊಳ್ಳಿ ಎಂದು ಅಶೋಕ್‌ ಸವಾಲು ಎಸೆದರು.
7
+ ಮಾಜಿ ಸಚಿವ ಸುನೀಲ್‌ಕುಮಾರ್‌ ಮಾತನಾಡಿ, ಇಂದು ಆರಂಭವಾಗುವ ಪ್��ತಿಭಟನೆ ಜನಾಂದೋಲನವಾಗಲಿದೆ. ಇಂಥ ಭಂಡ ಸಿಎಂ ಅನ್ನು ರಾಜ್ಯ ನೋಡಿಲ್ಲ,ಸಿದ್ದರಾಮಯ್ಯ ನವರಿಗೆ ಇಂಥ ಭಂಡತನ ಬರಬಾರದಿತ್ತು ಎಂದು ಟೀಕಿಸಿದರು. ಕಳಂಕ ಹೊತ್ತ ಸಿಎಂ, ನ್ಯಾಯಾಲಯದ ಛೀಮಾರಿ ಹಾಕಿಸಿಕೊಂಡ ಸಿಎಂ ಆಡಳಿತ ನಡೆಸಲು ನೈತಿಕತೆ ಕಳೆದುಕೊಂಡಿದ್ದಾರೆ. ಮೂರು ತಿಂಗಳು ಹೊರಗಿರಿ, ನಿರ್ದೋಷಿಯಾದರೆ ಮತ್ತೆ ಸಿಎಂ ಆಗಿ. ಆಗ ಬೇಕಿದ್ದರೆ ದೆಹಲಿ ಥರ ಎರಡು ಕುರ್ಚಿ ಇಟ್ಟುಕೊಳ್ಳಿ. ಗೌರವ ಇದ್ದರೆ ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದರು.
8
+ ಮಾತೆತ್ತಿದರೆ ನೀವಿಲ್ವಾ ನಾವಲ್ವಾ ಎನ್ನುತ್ತಾರೆ. ನಿಮದು ಹೇಳಿ ಈಗ, ನಿಮ ಕಳಂಕ ಬಗ್ಗೆ ಮಾತಾಡಿ. ಯಡಿಯೂರಪ್ಪ ಇದ್ದಾಗ ಏನ್‌ ಮಾತಾಡಿದ್ರಿ, ನೆನಪಿಸಿಕೊಳ್ಳಿ. ನಿಮಗೆ ಎರಡು ನಾಲಿಗೆ ಇದೆ ಎಂದು ಹೇಳಲ್ಲ. ಆದರೆ ಎರಡು ನಾಲಿಗೆ ಇರೋರ ಹಾಗೆ ನಡೆದುಕೊಳ್ಳಬೇಡಿ ಎಂದರು. ಮಾಜಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಹೈಕೋರ್ಟ್‌, ಜನಪ್ರತಿನಿಧಿಗಳ ಕೋರ್ಟ್‌ಗಳಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಆದೇಶವಾಗಿದೆ. ತನಿಖೆ ಎದುರಿಸುತ್ತೇನೆ, ರಾಜೀನಾಮೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಬಂಡತನ ತೋರುತ್ತಿದ್ದಾರೆ. ಮುಖ್ಯಮಂತ್ರಿಯಾದವರು ಈ ಮಟ್ಟಕ್ಕೆ ಇಳಿಯಬಾರದು ಎಂದು ವ್ಯಂಗ್ಯವಾಡಿದರು.
9
+ ವಿಪಕ್ಷ ನಾಯಕರಾಗಿದ್ದಾಗ ಅವಧಿಯಲ್ಲಿ ಸಿದ್ದರಾಮಯ್ಯನವರು ನೈತಿಕತೆ ಬಗ್ಗೆ ಬಹಳ ಮಾತನಾಡಿದ್ದರು ಎಂದು ಟೀಕಿಸಿದ ಅವರು, ಕೂಡಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು. ಮುಡಾ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಸಿದ್ದರಾಮಯ್ಯ ವಿರುದ್ಧ ಇಂದು ಎಫ್‌ಐಆರ್‌ ದಾಖಲಾಗುತ್ತದೆ. ಇಂಥ ಸಂದರ್ಭ ಬಂದಾಗ ಸಿದ್ದರಾಮಯ್ಯ ಮಾದರಿಯಾಗಿ ನಡೆದುಕೊಳ್ಳಬೇಕು. ಕ್ಲೀನ್‌ಚಿಟ್‌ ತಗೊಂಡು ಮತ್ತೆ ಬಂದು ಸಿಎಂ ಆಗಲಿ. ಯಾರೂ ತಡೆಯುವುದಿಲ್ಲ. ರಾಜೀನಾಮೆ ಕೊಟ್ಟು ಕೆಳಗಿಳಿದು ನೈತಿಕವಾಗಿ ಸರಿ ಇದ್ದೀನಿ ಎಂಬುದನ್ನು ಸಿದ್ದರಾಮಯ್ಯ ತೋರಿಸಲಿ ಎಂದು ಸವಾಲು ಹಾಕಿದರು.
eesanje/url_46_8_9.txt ADDED
@@ -0,0 +1,4 @@
 
 
 
 
 
1
+ ಜಮೀರ್‌ ಅಹಮದ್‌ ವಿರುದ್ಧ ನ್ಯಾಯಾಂಗ ನಿಂದನೆ ದೂರು
2
+ ಬೆಂಗಳೂರು,ಸೆ.26- ಮುಡಾ ಪ್ರಕರಣದಲ್ಲಿ ನ್ಯಾಯಾಲಯ ನೀಡಿರುವ ತೀರ್ಪು ರಾಜಕೀಯ ಪ್ರೇರಿತ ಎಂದು ಹೇಳಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ದೂರುದಾರ ಟಿ.ಜೆ.ಅಬ್ರಹಾಂ ಹೇಳಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್‌ ಅಹಮದ್‌, ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ನೀಡಿರುವ ತೀರ್ಪು ರಾಜಕೀಯ ಪ್ರೇರಿತ ಎಂದು ವಿವಾದಾತಕ ಹೇಳಿಕೆ ನೀಡಿದ್ದರು.
3
+ ಈಗ ಜಮೀರ್‌ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡಿರುವ ಅಬ್ರಹಾಂ ಅವರ ವಿರುದ್ಧ ಶುಕ್ರವಾರ ಅಥವಾ ಶನಿವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು. ಜಮೀರ್‌ ಅಹಮದ್‌ ಸಾಮಾನ್ಯ ವ್ಯಕ್ತಿಯಲ್ಲ. ಅವರೊಬ್ಬ ಜನಪ್ರತಿನಿಧಿ. ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡಬೇಕು. ಇದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಅತ್ಯಂತ ದುರದೃಷ್ಟಕರ. ಅವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಹೂಡುತ್ತೇವೆ ಎಂದು ಎಚ್ಚರಿಸಿದರು.
4
+ ಜಮೀರ್‌ ಅಹಮದ್‌ಗೆ ನಾಲಿಗೆ ಮೇಲೆ ಹಿಡಿತವಿಲ್ಲ. ಏನು ಮಾತನಾಡುತ್ತೇನೆಂಬ ಪರಿಜ್ಞಾನವೂ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಏನ ಮಾತನಾಡುತ್ತಿದ್ದೇನೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲ. ನ್ಯಾಯಾಲಯದ ಮೂಲಕವೇ ಅವರಿಗೆ ಪಾಠ ಕಲಿಸಬೇಕೆಂದು ಅಬ್ರಹಾಂ ಗುಡುಗಿದ್ದಾರೆ. ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದ ಜಮೀರ್‌ ಅಹಮದ್‌ ಇದು ರಾಜಕೀಯ ಪ್ರೇರಿತ ತೀರ್ಪಾಗಿದೆ. ನಮಗೆ ಹೈಕೋರ್ಟ್‌ ನೀಡಿರುವ ಆದೇಶ ಸಮಾಧಾನ ತಂದಿಲ್ಲ ಎಂದು ಪರೋಕ್ಷವಾಗಿ ಅಸಮಾಧಾ ಹೊರಹಾಕಿದ್ದರು.
eesanje/url_46_90_1.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲೆತ್ನಿಸಿದ ಪ್ರತಿಪಕ್ಷದ ನಾಯಕರನ್ನು ಎಳೆದೊಯ್ದ ಪೊಲೀಸರು
2
+ ಬೆಂಗಳೂರು,ಜು.3– ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಸಂಗ ಜರುಗಿತು.
3
+ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಉಪನಾಯಕ ಅರವಿಂದ್‌ ಬೆಲ್ಲದ್‌, ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸೇರಿದಂತೆ ಒಟ್ಟು 5 ತಂಡದಲ್ಲಿ ಸಿಎಂ ಸಿದ್ದರಾಮಯ್ಯನವರ ಸರ್ಕಾರಿ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
4
+ 5 ತಂಡದ ಜೊತೆಗೆ ಶಾಸಕರು, ವಿಧಾನಪರಿಷತ್‌ ಸದಸ್ಯರು, ಪಕ್ಷದ ಅಧಿಕಾರಿಗಳು ಹಾಗೂ ಪದಾಧಿಕಾರಿಗಳು ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಂತೆ ಮಾರ್ಗಮಧ್ಯದಲ್ಲಿಯೇ ಪೊಲೀಸರು ಪ್ರತಿಭಟನಾನಿರತರನ್ನು ತಡೆದು ವಶಕ್ಕೆ ಪಡೆದರು.ಶಿವಾನಂದ ವೃತ್ತದ ಬಳಿ ಬರುತ್ತಿದ್ದಂತೆ ತಡೆದ ಪೊಲೀಸರು ವಿಜಯೇಂದ್ರ, ಅಶೋಕ್‌ ಸೇರಿದಂತೆ ಎಲ್ಲರನ್ನೂ ವಶಕ್ಕೆ ಪಡೆದು ಪೊಲೀಸ್‌‍ ವಾಹನದಲ್ಲಿ ಕರೆದೊಯ್ದರು.
5
+ ಈ ವೇಳೆ ಪ್ರತಿಭಟನಾ ನಿರತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಹಗರಣದಲ್ಲಿ ಶಾಮೀಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ತಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.
6
+ ಹಣಕಾಸು ಖಾತೆಯನ್ನು ಹೊಂದಿರುವ ಸಿದ್ದರಾಮಯ್ಯನವರು ಮೂಗಿನಡಿಯೇ ಸುಮಾರು 187 ಕೋಟಿ ಹಗರಣ ನಡೆದಿದೆ. ಅವರ ಅನುಮತಿ ಇಲ್ಲದೇ ನಿಗಮದ ಹಣವನ್ನು ಖಾಸಗಿ ಬ್ಯಾಂಕಿನಲ್ಲಿ ಖಾತೆ ತೆರೆಯಲು ಅನುಮತಿ ನೀಡಿದವರು ಯಾರು?, ಹಣಕಾಸು ಇಲಾಖೆಯ ಕಾರ್ಯದರ್ಶಿ ಒಪ್ಪಿಗೆಯಿಲ್ಲದೆ, ಇದು ನಡೆಯಲು ಸಾಧ್ಯವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
7
+ ಇದರಲ್ಲಿ ಭಾರಿ ದೊಡ್ಡ ಮೊತ್ತದ ಹಗರಣ ನಡೆದಿರುವುದರಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ನೈತಿಕತೆ ಕಳೆದುಕೊಂಡಿದ್ದಾರೆ. ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.
eesanje/url_46_90_10.txt ADDED
@@ -0,0 +1,7 @@
 
 
 
 
 
 
 
 
1
+ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್
2
+ ಬೆಂಗಳೂರು,ಜು.1-ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವ ಚರ್ಚೆ ಮುನ್ನಲೆಗೆ ಬಂದಿದ್ದು, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೆಸರು ಮುಂಚೂಣಿಯಲ್ಲಿದೆ.
3
+ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದರಿಂದ ಸದ್ಯದಲ್ಲ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಮುಖ ರಾಗಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಚುನಾಯಿತರಾಗಿ ಕೇಂದ್ರ ಸಚಿವರಾಗುತ್ತಿದ್ದಂತೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ ವಿಚಾರ ಚರ್ಚೆಗೆ ಬಂದಿದೆ.
4
+ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್‌, ಶಾಸಕ ಸಿ.ಬಿ.ಸುರೇಶ್‌ ಬಾಬು ಅವರ ಹೆಸರು ಚಲಾವಣೆಗೆ ಬಂದಿದೆ. ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸು ವುದಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ನಿಖಿಲ್‌ಕುಮಾರಸ್ವಾಮಿ ಈಗಾಗಲೇ ಸ್ಪಷ್ಟಪಡಿಸಿ ದ್ದಾರೆ. ಹೀಗಾಗಿ ನಿಖಿಲ್‌ಕುಮಾರ ಸ್ವಾಮಿ ರಾಜ್ಯಾಧ್ಯಕ್ಷರಾಗಿ ಬಡ್ತಿ ಪಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
5
+ ಜಿಟಿಡಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನ: ಕುಮಾರಸ್ವಾಮಿ ಅವರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಜೆಡಿಎಸ್‌‍ ಶಾಸಕಾಂಗ ಪಕ್ಷದ ಸ್ಥಾನ ತೆರವಾಗಿದೆ.
6
+ ಆ ಸ್ಥಾನಕ್ಕೆ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷರಾಗಿರುವ ಹಿರಿಯ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ದೊರೆಯುವ ಸಾಧ್ಯತೆಗಳಿವೆ. ಈ ಬಗ್ಗೆ ಆಂತರಿಕ ವಲಯದಲ್ಲಿ ಚರ್ಚೆ ನಡೆದಿದೆ.
7
+ ಮಳೆಗಾಲದ ಅಧಿವೇಶನ ಆರಂಭ ವಾಗುವ ವೇಳೆಗೆ ಹೊಸ ಜೆಡಿಎಸ್‌‍ನ ಶಾಸಕಾಂಗ ಪಕ್ಷದ ನಾಯಕ ನೇಮಕವಾಗಲಿದ್ದು ಜಿ.ಟಿ.ದೇವೇಗೌಡರು ಆ ಸ್ಥಾನ ಪಡೆಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
eesanje/url_46_90_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ವಾಲ್ಮೀಕಿ ನಿಗಮ ಹಗರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೇಯೇ ಇಲ್ಲ : ಪರಮೇಶ್ವರ್‌
2
+ ಬೆಂಗಳೂರು,ಜು.1-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಗರಣದ ಬಗ್ಗೆ ಎಸ್‌‍ಐಟಿ ಮತ್ತು ಸಿಬಿಐನಿಂದ ಪ್ರತ್ಯೇಕವಾದ ತನಿಖೆ ನಡೆಯುತ್ತಿದೆ.
3
+ ಸಿಬಿಐನವರು ಬ್ಯಾಂಕಿನಲ್ಲಾಗಿರುವ ಹಗರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎಸ್‌‍ಐಟಿ ಇಲಾಖೆ ಲೋಪಗಳ ಬಗ್ಗೆ ವಿಚಾರಣೆ ನಡೆಸುತ್ತದೆ. ಈ ಎರಡೂ ತನಿಖೆಯ ವರದಿಗಳು ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಅದು ಅಧಿಕಾರಿಗಳೇ ಇರಲಿ, ರಾಜಕಾರಣಿಗಳೇ ಇರಲಿ, ಸರ್ಕಾರ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
4
+ ಬಿಜೆಪಿಯವರು ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ವರದಿ ಬರುವವರೆಗೂ ಯಾರ ಪಾತ್ರದ ಬಗ್ಗೆಯೂ ಸ್ಪಷ್ಟತೆ ಇಲ್ಲ. ತನಿಖೆ ಪೂರ್ಣಗೊಳ್ಳುವವರೆಗೂ ತಾಳೆಯಿಂದ ಇರಿ ಎಂದು ಹೇಳಿದರು.
5
+ ಡಿಸಿಎಂ ಹುದ್ದೆಗಾಗಿ ನಮಲ್ಲಿ ಯಾವುದೇ ಕಿತ್ತಾಟಗಳಿಲ್ಲ. ಜನಾದೇಶ ನೀಡಿದಂತೆ ನಮ ಸರ್ಕಾರ ಅಭಿವೃದ್ಧಿ ಕೆಲಸದತ್ತ ಗಮನ ಹರಿಸಿದೆ. ಬಿಜೆಪಿಯವರು ಅನಗತ್ಯವಾಗಿ ನಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೀರಾವರಿ, ರಸ್ತೆ ಅಭಿವೃದ್ಧಿ, ಕಂದಾಯ ಇಲಾಖೆ ಸೇರಿದಂತೆ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಿಂತಿಲ್ಲ.
6
+ ಜೊತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನೂ ಕೂಡ ಮುಂದುವರೆಸಲಾಗಿದೆ ಎಂದು ತಿಳಿಸಿದರು. ಬಿಜೆಪಿ ನಾಯಕರುಗಳ ನಡುವೆ ಹೊಂದಾಣಿಕೆ ಇಲ್ಲ. ಪರಸ್ಪರ ಅವರೇ ಕಚ್ಚಾಡುತ್ತಿದ್ದಾರೆ. ನಮ ಬಗ್ಗೆ ಹೇಳಿಕೆ ನೀಡುವುದು ಹಾಸ್ಯಾಸ್ಪದ ಎಂದರು. ಇಂದಿನಿಂದ ನೂತನ ಅಪರಾಧ ಮತ್ತು ನ್ಯಾಯ ಕಾನೂನುಗಳು ದೇಶಾದ್ಯಂತ ಜಾರಿಯಾಗುತ್ತಿದೆ. ರಾಜ್ಯಸರ್ಕಾರ ಅವುಗಳ ಅನುಷ್ಠಾನಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದೆ.
7
+ ಕಾನ್‌್ಸಟೇಬಲ್‌ನಿಂದ ಅಧಿಕಾರಿಗಳವರೆಗೂ ಎಲ್ಲರಿಗೂ ತರಬೇತಿ ನೀಡಲಾಗುವುದು. ವಿಶೇಷವಾದ ಆ್ಯಪ್‌ ಸಿದ್ಧಪಡಿಸಲಾಗಿದ್ದು, ಕಾನೂನು ಕಾಯ್ದೆಗಳ ಪರಿಚಯವಾಗುವವರೆಗೂ ಸುಲಭವಾಗಿ ಅರ್ಥೈಸುವಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದರು.
8
+ ಹೊಸ ಕಾನೂನುಗಳ ಯಶಸ್ಸು ಅಥವಾ ವೈಫಲ್ಯಗಳ ಬಗ್ಗೆ ತಕ್ಷಣವೇ ಏನೂ ಹೇಳಲು ಸಾಧ್ಯವಿಲ್ಲ. ಇಂದಿನಿಂದ ಹೊಸ ಕಾನೂನುಗಳ ಪ್ರಕಾರ, ಪ್ರಕರಣ ದಾಖಲಿಸಲಾಗುವುದು. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವಾಗ ಕಾನೂನುಗಳ ಸಫಲತೆ ಅಥವಾ ಲೋಪಗಳ ಬಗ್ಗೆ ಚರ್ಚೆಯಾಗಲಿದೆ. ಅಗತ್ಯವಿದ್ದರೆ ತಿದ್ದುಪಡಿ ತರಲೂ ಕೂಡ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.
9
+ ಪೊಲೀಸ್‌‍ ಸಿಬ್ಬಂದಿಗಳ ಅಂತರ್‌ಜಿಲ್ಲಾ ವರ್ಗಾವಣೆಗೆ ಪ್ರತ್ಯೇಕ ನಿಯಮಗಳನ್ನು ರೂಪಿಸಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದಿಂದ ಬಂದು ಬೆಂಗಳೂರಿನಲ್ಲಿ ಪೊಲೀಸ್‌‍ ಸೇವೆಯಲ್ಲಿ ಸೇರಿದವರಿಗೆ ಮರಳಿ ತವರಿನತ್ತ ಹೋಗಲು ಅವಕಾಶ ಇಲ್ಲದಂತಾಗಿದೆ. ಆರೋಗ್ಯ ಸಮಸ್ಯೆ, ಪೋಷಕರ ಅವಲಂಬನೆ, ಪತಿ-ಪತ್ನಿ ಪ್ರಕರಣಗಳಲ್ಲಿ ವರ್ಗಾವಣೆಗೆ ಅನುಕೂಲವಾಗುವಂತೆ ನಿಯಮಾವಳಿಗಳನ್ನು ಪರಿಷ್ಕರಿಸುವುದಾಗಿ ಹೇಳಿದರು.
10
+ ಸರೋಜಿನಿ ಮಹಿಷಿ ವರದಿ ಅನುಷ್ಠಾನ ಕುರಿತು ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಉದ್ದೇಶ ಸರಿಯಾಗಿದ್ದರೆ ಸರ್ಕಾರ ಗಮನ ಹರಿಸಲಿದೆ. ಪ್ರತಿಭಟನೆ ವೇಳೆ ಕಾನೂನು ಸುವ್ಯವಸ್ಥೆ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಈಗಾಗಲೇ ನಿರ್ದೇಶನ ನೀಡಿರುವುದಾಗಿ ಹೇಳಿದರು.
eesanje/url_46_90_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಶೇ.80 ರಷ್ಟು ಖಾಸಗಿ, ಸರ್ಕಾರಿ ಉದ್ಯೋಗ ಕನ್ನಡಿಗರಿಗೆ ಸಿಗಬೇಕು : ಕರವೇ ಪ್ರತಿಭಟನೆ
2
+ ಬೆಂಗಳೂರು,ಜು.1-ಕೇಂದ್ರ ಮತ್ತು ರಾಜ್ಯಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.80 ರಷ್ಟು ಉದ್ಯೋಗಗಳನ್ನು ಮೀಸಲಿಡಬೇಕೆಂದು ಆಗ್ರಹಿಸಿ ಅದಕ್ಕೆ ಅಗತ್ಯ ಕಾಯಿದೆಯನ್ನು ರೂಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆಯ ರಣಕಹಳೆ ಮೊಳಗಿಸಿದರು.
3
+ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರೆ, ರಾಜ್ಯಾದ್ಯಂತ ಕಾರ್ಯಕರ್ತರು ಎಲ್ಲಾ ಜಿಲ್ಲಾ ಕೇಂದ್ರಗಳ ಬಳಿ ಪ್ರತಿಭಟನೆ ನಡೆಸಿ ಎಲ್ಲಾ ಹಂತದಲ್ಲೂ ಕನ್ನಡಿಗರಿಗೆ ಉದ್ಯೋಗ ನೀಡುವಂತಹ ಸೂಕ್ತ ಕಾಯಿದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
4
+ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವುದು ಸೇರಿದಂತೆ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇ.100 ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ನೀಡಬೇಕು. ಇತರೆ ವರ್ಗಗಳಲ್ಲಿ ಶೇ.80 ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಬೇಕೆಂಬ ಒತ್ತಾಯವನ್ನು ಮಂಡಿಸಲಾಯಿತು.
5
+ ಕರವೇ ಕರೆಕೊಟ್ಟ ಈ ಬೆಂಬಲಕ್ಕೆ ಕನ್ನಡ ಸಾಹಿತ್ಯ ಪರಿಷತ್‌ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು, ಕಲಾವಿದರು, ಚಲನಚಿತ್ರ ನಟ-ನಟಿಯರು ಬೆಂಬಲ ಘೋಷಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡು ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.
6
+ ಚಳುವಳಿಯ ನೇತೃತ್ವ ವಹಿಸಿದ್ದ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾಡಿನ ನೆಲ, ಜಲ, ಸಂಸ್ಕೃತಿ ಉಳಿವಿಗಾಗಿ ನಿರಂತರ ಹೋರಾಟ ಮಾಡುತ್ತಾ ಬಂದಿದೆ.
7
+ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಇತ್ತೀಚೆಗೆ ಹೋರಾಟ ಮಾಡಿ ಅದರಲ್ಲಿ ಯಶಸ್ಸನ್ನು ಕಂಡಿದೆ. ಈಗ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟಕ್ಕಿಳಿದಿದೆ.ನಮ ರಾಜ್ಯದಲ್ಲಿ ನಮವರಿಗೇ ಉದ್ಯೋಗ ಕೊಡಿ ಎಂದು ಕೇಳಬೇಕಾದ ದುಸ್ಥಿತಿ ಬಂದಿರುವುದು ದುರದೃಷ್ಟಕರ. ಕನ್ನಡಿಗರು ಸಹನಾಶೀಲರು, ಶಾಂತಿಪ್ರಿಯರೂ ಆಗಿರುವುದರಿಂದ ಅನ್ಯಭಾಷಿಗರು ನಮವರ ಮೇಲೆ ಸವಾರಿ ಮಾಡುತ್ತಿದ್ದಾರೆ. ಹಾಗಾಗಿ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
8
+ ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ಎಲ್ಲಾ ಭಾಗಗಳಲ್ಲಿಯೂ ಕೂಡ ಬೇರೆ ಬೇರೆ ರಾಜ್ಯದವರು ಉದ್ಯೋಗಗಳನ್ನು ಆಕ್ರಮಿಸಿಕೊಂಡಿದ್ದಾರೆ. ಕನ್ನಡಿಗರ ಹಕ್ಕುಗಳನ್ನು ಹೊರರಾಜ್ಯಗಳಿಂದ ಬಂದವರು ಅನುಭವಿಸುತ್ತಿರುವುದರಿಂದ ನಮ ರಾಜ್ಯದಲ್ಲಿ ಕನ್ನಡಿಗರು ನಿರುದ್ಯೋಗಿಗಳಾಗಿ ಅಲೆಯುವಂತಹ ಪರಿಸ್ಥಿತಿ ಬಂದಿದೆ. ಹೀಗಾಗಿ ನಾವೆಲ್ಲಾ ಒಂದಾಗಿ ಹೋರಾಟ ಮಾಡಬೇಕಾದ ಅನಿವಾರ್ಯ ಎದುರಾಗಿದೆ. ಈಗ ನಾವು ಸಿಡಿದೆದ್ದು ನಿಲ್ಲದಿದ್ದರೆ ಮುಂದೆ ಖಂಡಿತಾ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
9
+ ಕರ್ನಾಟಕದಲ್ಲಿ ಸಂಪತ್ತು, ಉದ್ಯೋಗದ ಮೇಲೆ ಮೊದಲ ಹಕ್ಕು ಆದ್ಯತೆ ಕನ್ನಡಿಗರಿಗೆ ಸಿಗಬೇಕೆಂಬುದು ನಮ ಪ್ರತಿಪಾದನೆ. ಅದಕ್ಕಾಗಿ ನಾವು ಹೋರಾಟಕ್ಕೆ ಇಳಿದಿದ್ದೇವೆ. ಅದನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ನಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ನಾರಾಯಣಗೌಡರು ಗುಡುಗಿದರು.ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ರಾಜ್ಯಸರ್ಕಾರಕ್ಕೆ ಸಲ್ಲಿಸಲಾಯಿತು.
eesanje/url_46_90_2.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಗೃಹಲಕ್ಷ್ಮಿ ಹಣ ಸಂದಾಯ ಸ್ಥಗಿತ..? : ಮಾತು ತಪ್ಪಿದ ‘ಗ್ಯಾರಂಟಿ’ ಸರ್ಕಾರದ ವಿರುದ್ಧ ಜನಾಕ್ರೋಶ
2
+ ಬೆಂಗಳೂರು,ಜು.3-ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಸ್ಥಗಿತಗೊಳಿಸಲಾಗಿದ್ದು, ಮಾತು ತಪ್ಪಿದ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಲೋಕಸಭಾ ಚುನಾವಣೆಗೂ ಮುನ್ನ ಯೋಜನೆಯನ್ನು ಜಾರಿಗೊಳಿಸಿದ್ದ ರಾಜ್ಯಸರ್ಕಾರ ನಿಯಮಿತವಾಗಿ ಮೂರು ತಿಂಗಳಿಗೂ ಹೆಚ್ಚು ಕಾಲ ಹಣ ಸಂದಾಯ ಮಾಡಿದೆ.ಲೋಕಸಭಾ ಚುನಾವಣೆ ನಂತರ ಏಕಾಏಕಿ ಹಣ ಸಂದಾಯ ಸ್ಥಗಿತಗೊಂಡಿದೆ.
3
+ ಮತದಾನಕ್ಕೂ ಹಿಂದುಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಹಣವನ್ನು ಪಾವತಿಸಲಾಗಿತ್ತು. ಫಲಿತಾಂಶದಲ್ಲಿ ಕಾಂಗ್ರೆಸ್‌‍ ಪಕ್ಷ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸದೇ ಇರುವುದರಿಂದ ಯೋಜನೆಗಳ ಬಗ್ಗೆ ವ್ಯಾಪಕ ವಿಮರ್ಶೆಗಳು ಶುರುವಾಗಿವೆ.
4
+ ಜನ ಭಾವನಾತಕ ವಿಚಾರಗಳಿಗೆ ಮಣೆ ಹಾಕಿದ್ದಾರೆ. ಅಭಿವೃದ್ಧಿ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ಫಲಾನುಭವಿಗಳೂ ಕೂಡ ಕಾಂಗ್ರೆಸ್‌‍ ಪಕ್ಷವನ್ನು ಬೆಂಬಲಿಸಿಲ್ಲ. ಹೀಗಾಗಿ ಯೋಜನೆಗಳನ್ನು ಮುಂದುವರೆಸಬೇಕೇ? ಬೇಡವೇ? ಎಂಬ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ.
5
+ ಕಾಂಗ್ರೆಸ್‌‍ನ ಕೆಲವು ಶಾಸಕರು ಪಂಚಖಾತ್ರಿ ಯೋಜನೆಗಳನ್ನು ನಿಲ್ಲಿಸಿ ಆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಆದರೆ ಸರ್ಕಾರದ ಪ್ರಮುಖರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಮತ್ತಿತರ ಮುಖಂಡರು ನಾವು ಚುನಾವಣೆ ಅಥವಾ ಮತಗಳಿಕೆಯ ಕಾರಣಕ್ಕಾಗಿ ಯೋಜನೆಗಳನ್ನು ಜಾರಿಗೊಳಿಸಿಲ್ಲ.
6
+ ಜನರ ಜೀವನ ಸುಧಾರಣೆ, ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಸುಸ್ಥಿರತೆಗಾಗಿ ಪಂಚಖಾತ್ರಿ ಯೋಜನೆಗಳನ್ನು ರೂಪಿಸಲಾಗಿದೆ. ಅವುಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ ಆಡಿದ ಮಾತಿನಂತೆ ಸರ್ಕಾರ ನಡೆದುಕೊಳ್ಳುತ್ತಿಲ್ಲ ಎಂಬ ಟೀಕೆಗಳಿವೆ.
7
+ ಚುನಾವಣೆಯ ಸಂದರ್ಭದಲ್ಲಿ ನೀತಿಸಂಹಿತೆಯನ್ನೂ ಮೀರಿ 2 ಸಾವಿರ ರೂ.ಗಳ ಗೃಹಲಕ್ಷ್ಮಿ ಹಣವನ್ನು ಪಾವತಿಸಿದ ಸರ್ಕಾರ, ಫಲಿತಾಂಶದ ಬಳಿಕ ಸ್ಥಗಿತಗೊಳಿಸಿರುವುದೇಕೆ ಎಂಬ ಪ್ರಶ್ನೆಗಳಿವೆ.ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳುತ್ತಲೇ ಫಲಾನುಭವಿಗಳಿಗೆ ಹಣ ಸಂದಾಯ ಮಾಡದಿರುವುದು ಚರ್ಚೆಗೆ ಗ್ರಾಸವಾಗಿದೆ.
8
+ ಬಹುನಿರೀಕ್ಷಿತ ಗೃಹಲಕ್ಷಿ ಯೋಜನೆಯಡಿ ಸರ್ಕಾರ ತನ್ನ ಬೊಕ್ಕಸದಿಂದ ಫಲಾನುಭವಿಗಳಿಗೆ ಹಣ ನೀಡಬೇಕಿದೆ. ಯೋಜನೆಗೆ ಹಣ 2 ತಿಂಗಳಿನಿಂದಲೂ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ.
9
+ ಉಳಿದೆರಡು ಯೋಜನೆಗಳಾದ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಪಾಲಿನ ವೆಚ್ಚ ಬಾಬ್ತನ್ನು ಸರ್ಕಾರ ತನ್ನದೇ ಅಂಗ ಸಂಸ್ಥೆಗಳಿಗೆ ಪಾವತಿಸುತ್ತಿದೆ. ಹೀಗಾಗಿ ಪಾ���ತಿಯಲ್ಲಿ ವಿಳಂಬವಾದರೂ ಅದು ಜನಸಾಮಾನ್ಯರ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಈ ಎರಡೂ ಯೋಜನೆಗಳು ಅಬಾಧಿತವಾಗಿ ಮುಂದುವರೆದಿವೆ.
10
+ ಗೃಹಲಕ್ಷ್ಮಿ ಯೋಜನೆ ಕೆಲವರಿಗೆ ಅನಗತ್ಯ ಎನಿಸಿದರೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ವರದಾನವಾಗಿದೆ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕುಟುಂಬಕ್ಕೆ ಆರ್ಥಿಕ ಚೈತನ್ಯ ನೀಡುವಲ್ಲಿ ಸಫಲವಾಗಿತ್ತು. ಅದರಲ್ಲೂ ಹಿರಿಯ ಮಹಿಳೆಯರಿಗೆ ಯೋಜನೆ ಜೀವನಾಧಾರವಾಗಿತ್ತು. ಈಗ ಅದರ ಹಣವನ್ನು ಪಾವತಿಸದೇ ಇರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
11
+ ಸರ್ಕಾರ ಯೋಜನೆಗಳನ್ನು ನಿಲ್ಲಿಸುತ್ತದೆಯೋ?, ಮುಂದುವರೆಸುತ್ತದೆಯೋ? ಎಂಬ ಪ್ರಶ್ನೆಗಳು ಕಾಡುತ್ತಿವೆ. ಕಾಂಗ್ರೆಸ್‌‍ಗೆ ಮತ ಹಾಕಿಲ್ಲ ಎಂಬ ಸಿಟ್ಟಿಗೆ ಯೋಜನೆ ಸ್ಥಗಿತಗೊಂಡರೆ ಅದನ್ನೇ ನಂಬಿ ಕುಳಿತಿರುವ ಅಸಹಾಯಕ ಮಹಿಳೆಯರಿಗೆ ಭಾರಿ ನಿರಾಶೆಯಾಗುವುದಂತೂ ಗ್ಯಾರಂಟಿ.
eesanje/url_46_90_3.txt ADDED
@@ -0,0 +1,5 @@
 
 
 
 
 
 
1
+ ಜುಲೈ 15ರಿಂದ ಮಳೆಗಾಲದ ಅಧಿವೇಶನ
2
+ ಬೆಂಗಳೂರು, ಜು.3– ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನವು ಜುಲೈ 15ರಿಂದ ಪ್ರಾರಂಭವಾಗಲಿದೆ.ಜುಲೈ 15ರಿಂದ ಜು.26ರವರೆಗೆ 9ದಿನಗಳ ಮಳೆಗಾಲದ ಅಧಿವೇಶನವನ್ನು ನಡೆಸಲು ನಿಗದಿಪಡಿಸಲಾಗಿದೆ. ಜುಲೈ 15ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಸಮಾವೇಶಗೊಳ್ಳುವಂತೆ ರಾಜ್ಯಪಾಲರು ಆದೇಶಿಸಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
3
+ ಜುಲೈ 26 ನಂತರ ಅಧಿವೇಶನವನ್ನು ವಿಸ್ತರಣೆ ಮಾಡುವ ಅಥವಾ ಮುಕ್ತಾಯಗೊಳಿಸುವ ಬಗ್ಗೆ ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ.ಕಳೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ನಡೆಸುವ ದಿನಾಂಕ ನಿರ್ಧಾರ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಅವರಿಗೆ ನೀಡಲಾಗಿತ್ತು. ಅದರಂತೆ ಅಧಿವೇಶನ ನಡೆಸುವ ದಿನಾಂಕವನ್ನು ನಿಗದಿಪಡಿಸಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿದ್ದು, ಅವರು ಅನುಮತಿ ನೀಡಿದ್ದಾರೆ.
4
+ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ನಡೆಯುತ್ತಿರುವ ಮೊದಲ ಅಧಿವೇಶನವಾಗಿದೆ. ಈ ಚುನಾವಣೆಯ ಗೆಲುವಿನ ಉತ್ಸಾಹದಲ್ಲಿರುವ ಪ್ರತಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌‍ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗುತ್ತಿವೆ. ಹೀಗಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ವಾಕ್ಸಮರಕ್ಕೆ ಈ ಬಾರಿಯ ಅಧಿವೇಶನ ವೇದಿಕೆಯಾಗಲಿದೆ.
5
+ ರೈತರ ಆತಹತ್ಯೆ, ಕಳೆದ ಮುಂಗಾರು ಹಂಗಾಮಿನ ಬರಪರಿಹಾರ ಧನ ವಿತರಣೆ ವಿಳಂಬ, ಪೆಟ್ರೋಲ್‌, ಡೀಸೆಲ್‌, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ವಿಚಾರವನ್ನು ಪ್ರಮುಖ ಅಸ್ತ್ರವಾಗಿ ಸರ್ಕಾರದ ವಿರುದ್ಧ ಬಳಸಲು ಪ್ರತಿ ಪಕ್ಷಗಳು ತಯಾರಿ ನಡೆಸಿವೆ.ಜನರು ದಿನ ನಿತ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸದನದ ಒಳ ಹೊರಗು ಹೋರಾಟ ನಡೆಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಹಾಗೂ ಸಮಸ್ಯೆಗಳಿಗೆ ಸರ್ಕಾರದಿಂದ ಪರಿಹಾರ ದೊರಕಿಸಲು ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲಿವೆ.
eesanje/url_46_90_4.txt ADDED
@@ -0,0 +1,5 @@
 
 
 
 
 
 
1
+ ಜು.5ರಂದು ಮಂಡ್ಯದಲ್ಲಿ ಹೆಚ್‌ಡಿಕೆ ಜನತಾ ದರ್ಶನ
2
+ ಬೆಂಗಳೂರು, ಜು.3-ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಜು.5ರಂದು ಮಂಡ್ಯದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.
3
+ ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಜನತಾ ದರ್ಶನ ನಡೆಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕುಮಾರಸ್ವಾಮಿ ಅವರು ನಡೆಸಲಿರುವ ಜನತಾ ದರ್ಶನಕ್ಕೆ ಅಗತ್ಯ ಸಿದ್ಧತೆ ಹಾಗೂ ಕ್ರಮ ಕೈಗೊಳ್ಳಲು ಮಂಡ್ಯ ಜಿಲ್ಲಾಧಿಕಾರಿಗೆ ಸಚಿವರ ಆಪ್ತ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.
4
+ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ನಡೆಸಿದ್ದ ಜನತಾ ದರ್ಶನ ಜನಮನ್ನಣೆಗೆ ಪಾತ್ರವಾಗಿತ್ತು. ಮಂಡ್ಯ ಕ್ಷೇತ್ರದಿಂದ ಚುನಾಯಿತರಾದ ನಂತರ ಮೊದಲ ಬಾರಿಗೆ ನಡೆಸುವ ಜನತಾ ದರ್ಶನವಾಗಿದೆ.
5
+ ಜನತಾ ದರ್ಶನದಲ್ಲಿ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸಂಬಂಧಿಸಿದ ಮನವಿ ಪತ್ರಗಳನ್ನು ಕುಮಾರಸ್ವಾಮಿ ಅವರು ಸ್ವೀಕರಿಸಲಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
eesanje/url_46_90_5.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ “ಹಿಂದೂಗಳು ಹಿಂಸೆ ಮಾಡ್ತಾರೆ”ಎಂದ ರಾಹುಲ್ ಸಮರ್ಥಿಸಿಕೊಂಡ ಸಿಎಂಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಕ್ಲಾಸ್
2
+ ಬೆಂಗಳೂರು,ಜು.2-ಹಿಂದೂ ಎಂದು ಹೇಳಿಕೊಳ್ಳುವವರು 24 ಗಂಟೆ ಹಿಂಸೆ, ದ್ವೇಷ, ಸುಳ್ಳನ್ನು ಹರಡುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನೆಟ್ಟಿಗರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
3
+ ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಮ ನಾಯಕರಾದ ರಾಹುಲ್‌ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದ ಬಿಜೆಪಿ, ತನಗೆ ಹೇಳಿದ ಮಾತನ್ನು ಹಿಂದೂ ಧರ್ಮಕ್ಕೆ ಹೇಳಿದ್ದಾರೆ ಎಂದು ತಿರುಚಿ ತನ್ನ ವೈಲ್ಯ ಮರೆಮಾಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ.
4
+ ವಾಟ್ಸ್‌‍ ಆಪ್‌ ನಲ್ಲಿ ಬಿಜೆಪಿ ಕೃಪಾಪೋಷಿತ ಫೇಕ್ ನ್ಯೂಸ್‌‍ ಶೂರರು ಹರಿಬಿಟ್ಟಿರುವ ಅರ್ಧಂಬರ್ಧ ವಿಡಿಯೋ ನೋಡಿ ಅದನ್ನು ಇತರರಿಗೂ ರ್ಶೇ ಮಾಡದಿರಿ. ಸತ್ಯ ಏನೆಂಬುದನ್ನು ಒಳಗೊಂಡ ಪೂರ್ತಿ ವಿಡಿಯೋ ಇಲ್ಲಿದೆ ಎಂದು ವಿಡಿಯೋ ಹಂಚಿಕೂಂಡಿದ್ದರು.ಅವರು ಹಂಚಿಕೊಂಡ ವಿಡಿಯೋದಲ್ಲಿ ರಾಹುಲ್‌ ಮೊದಲು ಹೇಳಿದ್ದು, ನಂತರ ಸ್ಪಷ್ಟನೆ ನೀಡಿದ್ದು ಎರಡೂ ಇದೆ. ಸಿದ್ದರಾಮಯ್ಯನವರ ಸಮರ್ಥನೆಯನ್ನು ಬಹುತೇಕ ನೆಟ್ಟಿಗರು ಒಪ್ಪಿಕೊಂಡಿಲ್ಲ.
5
+ 'ಭಯಪಡಬೇಡಿ, ಭಯಗೊಳಿಸಬೇಡಿ'ಎಂದು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲ ಧರ್ಮಗಳು ಸಾರಿ ಹೇಳಿವೆ.ಆದರೆ ಬಿಜೆಪಿಯಲ್ಲಿ ಹಿಂದುಗಳೆಂದು ಹೇಳಿಕೊಳ್ಳುವವರ ಕೆಲಸವೇ ಹಿಂಸೆ, ಭಯ ಮತ್ತು ಸುಳ್ಳು ಹರಡುವುದು…."– ಹೀಗೆಂದು ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಹೇಳಿದರೆ ಬಿಜೆಪಿ ನಾಯಕರೇಕೆ ಉರಿದು ಬೀಳಬೇಕು?…../XXVAhI2BZN
6
+ ಮಾನ್ಯ ಮುಖ್ಯಮಂತ್ರಿಗಳೇ ಸ್ವಲ್ಪ ವಿವೇಚನೆ ಇರಲಿ :ಮಾನ್ಯ ಮುಖ್ಯಮಂತ್ರಿಗಳೇ ಸ್ವಲ್ಪ ವಿವೇಚನೆ ಇರಲಿ, ಅಖಂಡ ಭಾರತವನ್ನು ಯಾವುದರ ಆಧಾರದ ಮೇಲೆ ವಿಭಜನೆ ಮಾಡಿದ್ದು. ಭಾರತವು ಬಾಂಗ್ಲಾದೇಶ ಉಗಮಕ್ಕೆ ಕಾರಣವಾಯಿತು ಆದರೆ ಅಲ್ಲಿ ಹಿಂದೂ ಧರ್ಮವನ್ನು ಹೇರಲಿಲ್ಲ, ಆದರೆ ಬಾಂಗ್ಲಾದೇಶ ಜಾತ್ಯತೀತತೆ ಬಿಟ್ಟು ಮುಸ್ಲಿಂ ರಾಷ್ಟ್ರ ಅಂತ ಘೋಷಣೆ ಮಾಡಿಕೊಂಡಿತ್ತು. ಅಲ್ಲಿನ ಹಿಂದೂಗಳ ಪರಿಸ್ಥಿತಿ ಅರಿವಿದೇಯ? ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ.
7
+ ನಿಮ ಮತ್ತು ಕಾಂಗ್ರೆಸ್‌‍ ನ ಹಿಂದೂ ವಿರೋಧಿ ನೀತಿ :ಸಿದ್ದರಾಮಯ್ಯನವರೇ, ಬಹಳ ಬುದ್ಧಿವಂತಿಕೆಯಿಂದ ನಿಮ ಮತ್ತು ಕಾಂಗ್ರೆಸ್‌‍ನ ಹಿಂದೂ ವಿರೋಧಿ ನೀತಿಯನ್ನು ರಾಹುಲ್‌ ಗಾಂಧಿಯ ಹೆಸರಲ್ಲಿ ವಿವರಿಸಿದ್ದೀರಿ!! ರಾಜಕೀಯ ಲಾಭಕ್ಕಾಗಿ ಇಷ್ಟೊಂದು ಕೀಳು ಮಟ್ಟಕ್ಕೆ ಇಳಿದಿದ್ದೀರಿ ಕಾಂಗ್ರೆಸ್‌‍ನವರು.. ಥೂ ನಾಚಿಕೆಯಾಗಬೇಕು ಕಾಂಗ್ರೆಸ್‌‍ ನವರಿಗೆ!! ಹಿಂದೂಗಳು ಹಿಂಸೆ, ಭಯ ಮತ್ತು ಸುಳ್ಳು ಹರಡುವವರೇ? ಎನ್ನುವ ಇನ್ನೊಂದು ಪ್ರತಿಕ್ರಿಯೆ ಬಂದಿದೆ.
8
+ ಸ್ವಲ್ಪ ಕೇಳಿ ….../
9
+ ಪರಮೇಶ್ವರ ತ್ರಿಶೂಲ ದುಷ್ಟ��� ಸಂಹಾರಕ್ಕೆ ಇರೋದು :ಪರಮೇಶ್ವರ ತ್ರಿಶೂಲ ದುಷ್ಟರ ಸಂಹಾರಕ್ಕೆ ಇರೋದು. ಹಿಂದೂಗಳು ಆಗಿರುವುದಕ್ಕೆ ಇಲ್ಲಿಯವರೆಗೂ ಅನ್ಯ ಧರ್ಮದವರ ದಾಳಿ ಯಾರನ್ನು ಸಹಿಸಿಕೊಂಡು ತಮ ದೇಶದ ಎರಡು ಭಾಗವನ್ನು ಕಳೆದುಕೊಂಡು, ಶಿರ ಭಾಗವನ್ನು ಇದೀಗ ಉಳಿಸಿಕೊಂಡಿರೋದು. ಕತ್ತೆಗೇನು ಗೊತ್ತು ಭತ್ತದ ಸುಗ್ಗಿ? ದಾಳಿಗೆ ಪ್ರತಿದಾಳಿ ಎಂದು. ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರದ ನೀತಿ ಗೊತ್ತು ಎನ್ನುವ ಮತ್ತೊಂದು ಪ್ರತಿಕ್ರಿಯೆ ಬಂದಿದೆ.
10
+ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ತಮ ಚೊಚ್ಚಲ ಭಾಷಣವನ್ನು ವೀರಾವೇಷವಾಗಿ ಏನೋ ಲೋಕಸಭೆಯಲ್ಲಿ ಮಾಡಿದ್ದಾರೆ. ಆದರೆ, ತಮ ಭಾಷಣದ ವೇಳೆ ಶಿವನ ೇಟೋ ಹಿಡಿದು ಮಾಡಿದ ಭಾಷಣ ಆಕೋಶಕ್ಕೆ ಕಾರಣವಾಗಿದೆ. ಮಾತಿನ ಭರದಲ್ಲಿ ವಿನಾಕಾರಣ ವಿವಾದ ಮೈಗೆಳೆದುಕೊಂಡಿದ್ದಾರೆ.
11
+ ಆ ವೇಳೆ, ಮಧ್ಯ ಪ್ರವೇಶಿಸಿದ ಪ್ರಧಾನಿ ಮೋದಿ, ಇಡೀ ಹಿಂದೂ ಸಮುದಾಯವನ್ನು ಹಿಂಸಾತಕ ಎಂದು ಕರೆಯುವುದು ಗಂಭೀರ ವಿಚಾರ ಎಂದು ಹೇಳಿದ್ದರು. ಆಗ, ತಮ ತಪ್ಪಿನ ಅರಿವಾದ ರಾಹುಲ್‌ ಗಾಂಧಿ, ಇಲ್ಲ..ಇಲ್ಲ.. ನಾನು ಹೇಳಿದ್ದು ಬಿಜೆಪಿ, ಆರ್‌ಎಸ್‌‍ಎಸ್‌‍, ಮೋದಿ ಮಾತ್ರ ಹಿಂದೂಗಳಲ್ಲ ಎಂದು ಸ್ಪಷ್ಟನೆ ನೀಡಿದ್ದರು. ರಾಹುಲ್‌ ಅವರ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ತಮ ಟ್ವಿಟ್ಟರ್‌ (ಎಕ್ಸ್ ) ನಲ್ಲಿ ಸಮರ್ಥಿಸಿಕೊಂಡಿದ್ದು ಹೀಗೆ.. ಭಯಪಡಬೇಡಿ, ಭಯಗೊಳಿಸಬೇಡಿ ಎಂದು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌, ಸಿಖ್‌ ಸೇರಿದಂತೆ ಎಲ್ಲ ಧರ್ಮಗಳು ಸಾರಿ ಹೇಳಿವೆ.
12
+ ಆದರೆ ಬಿಜೆಪಿಯಲ್ಲಿ ಹಿಂದುಗಳೆಂದು ಹೇಳಿಕೊಳ್ಳುವವರ ಕೆಲಸವೇ ಹಿಂಸೆ, ಭಯ ಮತ್ತು ಸುಳ್ಳು ಹರಡುವುದು…. ಹೀಗೆಂದು ವಿರೋಧಪಕ್ಷದ ನಾಯಕರಾದ ರಾಹುಲ್‌ ಗಾಂಧಿಯವರು ಹೇಳಿದರೆ ಬಿಜೆಪಿ ನಾಯಕರೇಕೆ ಉರಿದು ಬೀಳಬೇಕು? ಬಿಜೆಪಿ ಅವರಿಗೆ, ಆರ್‌.ಎಸ್‌‍.ಎಸ್‌‍ ನವರಿಗೆ, ಬಿಜೆಪಿಯವರಿಗೆ ಗುರಿಯಾಗಿಸಿ ಹೇಳಿದರೆ ಅದು ಇಡೀ ಹಿಂದೂ ಧರ್ಮಕ್ಕೆ ಹೇಳಿದಂತಾಗುತ್ತದೆಯೇ? ಎಂದು ಹೇಳಿಕೆಯನ್ನು ರಾಹುಲ್‌ ಗಾಂಧಿ ಅವರು ಸಮರ್ಥನೆ ಮಾಡಿಕೊಂಡಿದ್ದರು.
eesanje/url_46_90_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಿತಿಮೀರಿದ ಡೆಂಘಿ ಮಹಾಮಾರಿ, 6ಮಂದಿ ಸಾವು
2
+ ಬೆಂಗಳೂರು,ಜು.2-ರಾಜ್ಯದ ಹಲವೆಡೆ ಡೆಂಘಿ ಮಹಾಮಾರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.ರಾಜಧಾನಿ ಬೆಂಗಳೂರು, ಹಾಸನ, ಶಿವಮೊಗ್ಗ, ಹಾವೇರಿ, , ಚಿಕ್ಕಮಗಳೂರು, ಮೈಸೂರು, ಚಿತ್ರದುರ್ಗ, ಧಾರವಾಡ ಸೇರಿದಂತೆ ಹಲವೆಡೆ ದಿನೇದಿನೇ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವು-ನೋವು ಕೂಡ ಸಂಭವಿಸುತ್ತಿದೆ. ಈಗಾಗಲೇ ಡೆಂಘಿಗೆ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
3
+ ಬೆಂಗಳೂರಿನಲ್ಲಿ 1, ಶಿವಮೊಗ್ಗ 1, ಹಾಸನ 2, ಹಾವೇರಿಯಲ್ಲಿ 1, ಧಾರವಾಡದಲ್ಲಿ ಒಬ್ಬರು ಡೆಂಘಿ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಡೆಂಘಿ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
4
+ ಬೆಂಗಳೂರಿನಲ್ಲಿ 1,563, ಚಿಕ್ಕಮಗಳೂರು 491, ಮೈಸೂರು 479, ಹಾವೇರಿಯಲ್ಲಿ 451, ಚಿತ್ರದುರ್ಗ 265, ದಕ್ಷಿಣ ಕನ್ನಡ 233 ಮಂದಿ ಡೆಂಘಿ ಲಕ್ಷಣಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ವಿವಿಧೆಡೆ 5 ಸಾವಿರಕ್ಕೂ ಹೆಚ್ಚು ಮಂದಿಗೆ ಈ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಬೇಕೆಂದು ಸೂಚನೆ ನೀಡಲಾಗಿದೆ.ವ್ಯಾಪಕವಾಗಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ.
5
+ ಡೆಂಘಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೋಗ ನಿಯಂತ್ರಣದ ಬಗ್ಗೆ ಕೈಗೊಳ್ಳುವ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.
6
+ ರಾಜಧಾನಿಯಲ್ಲಿ ಡೆಂಘಿ ಹೆಚ್ಚಳ :ರಾಜಧಾನಿ ಬೆಂಗಳೂರಿನಲ್ಲಿ ಮಾರಕ ರೋಗ ಡೆಂಘಿ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಲರ್ಟ್‌ ಆಗಿರುವ ಬಿಬಿಎಂಪಿ ಮನೆಮನೆ ಸಮೀಕ್ಷೆ ನಡೆಸಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಮುಂದಾಗಿದೆ.
7
+ 1500 ಜನರ ತಂಡ ರಚಿಸಿ 12 ಲಕ್ಷ ಮನೆಗಳ ಸಮೀಕ್ಷೆ ನಡೆಸಲು ಯೋಜನೆ ರೂಪಿಸಿದ್ದು, ಪ್ರತಿ ವಾರ ಈ ತಂಡ ಮನೆಮನೆಗಳಿಗೆ ತೆರಳಿ ಡೆಂಘಿ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದೆ. ರೋಗ ಪತ್ತೆ ತಡೆಯುವಿಕೆ, ರೋಗ ಬರದಂತೆ ಎಚ್ಚರ ವಹಿಸುವ ಕಾರ್ಯಗಳಲ್ಲಿ ಮುಂದಾಗಿದೆ.
8
+ ಆಶಾ ಕಾರ್ಯಕರ್ತೆಯರು, ಎಎನ್‌ಎಂ ಕಾರ್ಯಕರ್ತರು ಹಾಗೂ ಆರೋಗ್ಯಾಧಿಕಾರಿಗಳನ್ನೊಳಗೊಂಡ ಈ ತಂಡ ಎನ್‌ಎಸ್‌‍ಎಸ್‌‍ ಹಾಗೂ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡು ಈ ಮಾರಕ ಕಾಯಿಲೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮುಂದಾಗಿದೆ.
9
+ ಬೆಂಗಳೂರಿನಲ್ಲಿ 1,563 ಡೆಂಘಿ ಲಕ್ಷಣ ಪ್ರಕರಣಗಳು ಕಂಡುಬಂದಿವೆ. ಕೇವಲ 2 ದಿನದಲ್ಲಿ 78 ಸ್ಯಾಂಪಲ್‌ಗಳ ಪೈಕಿ 12 ಮಂದಿಗೆ ಡೆಂಘಿ ಇರುವುದು ದೃಢಪಟ್ಟಿದೆ. ಪಶ್ಚಿಮ ವಲಯದಲ್ಲಿ 5, ಬೊಮನಹಳ್ಳಿ ಹಾಗೂ ಮಹದೇವಪುರ ವಲಯದಲ್ಲಿ ತಲಾ 2 ಪ್ರಕರಣಗಳು ದೃಢಪಟ್ಟಿರುವುದು ಪತ್ತೆಯಗಿದೆ.
10
+ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ವಲಯಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚನೆ ನೀಡಿದ್ದಾರೆ.ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಡೆಂಘಿ ಪ್ರಕರಣಗಳ ಬಗ್ಗೆ ಕಡ್ಡಾಯವಾಗಿ ಸರ್ಕಾರಕ್ಕೆ ಮಾಹಿತಿ ನೀಡಬೇಕೆಂದು ಸೂಚನೆ ನೀಡಲಾಗಿದೆ.
11
+ ಹಾವೇರಿಯಲ್ಲಿ ಡೆಂಘಿ ಆತಂಕ :ಹಾವೇರಿ ಜಿಲ್ಲೆಯಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್‌ ನಿನ್ನೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪ್ರತಿ ವಾರ್ಡ್‌ಗೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಡೆಂಘಿ ವಾರ್ಡ್‌ ಸೇರಿದಂತೆ ಮಹಿಳಾ, ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಅವರು ಕ್ರಮಗಳ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿದರು.
eesanje/url_46_90_7.txt ADDED
@@ -0,0 +1,8 @@
 
 
 
 
 
 
 
 
 
1
+ : 4,000 ಕೋಟಿ ರೂ. ಗುಳುಂ ಮಾಡಿದ ಗೋಲಾಲ್‌ ಸಿಎಂ : ಆರ್‌.ಅಶೋಕ್‌ ಗಂಭೀರ ಆರೋಪ
2
+ ಬೆಂಗಳೂರು,ಜು.2-ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ಸಿದ್ಧ ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮೆ ತಮ ಕೈ ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಿಧಾನಸಭೆಯ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.
3
+ ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಸಾಲು ಸಾಲು ಪೋಸ್ಟ್‌ ಮಾಡಿರುವ ಆಶೋಕ್‌ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ 4,000 ಕೋಟಿ ಗುಳುಂ ಮಾಡಿರುವ ಹಗರಣಕ್ಕೆ ಈ ಪ್ರಶ್ನೆಗಳಿಗೆ ನಿಮ ಬಳಿ ಉತ್ತರವಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
4
+ ಗೋಲಾಲ್‌ ಸಿಎಂ ಸಿದ್ದರಾಮಯ್ಯನವರೇನವರೇ, ತಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈ ತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
5
+ 4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್‌‍ ಅಧಿಕಾರಿಗಳನ್ನು ನೇಮಿಸಿ ಪ್ರಕರಣವನ್ನು ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ ಪಾಲೆಷ್ಟು? ಎಂದು ಪ್ರಶ್ನೆಸಿದ್ದಾರೆ.
6
+ 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು? ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಾರಸ್ಸು ಮಾಡಿದ್ದು ಯಾರು? ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು? ಎಂದು ಕಿಡಿಕಾರಿದ್ದಾರೆ.
7
+ ನಿಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥ್ದೊಂದು ಬೃಹತ್‌ ಹಗರಣ ತಮ ಗಮನಕ್ಕೆ ಬಾರದೆ, ತಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಎಂದು ಅಶೋಕ್‌ ಅನುಮಾನ ವ್ಯಕ್ತಪಡಿಸಿದ್ದಾರೆ.
8
+ ಗೋಲ್ಮಾಲ್ ಸಿಎಂ₹4,000 ಕೋಟಿ ಗುಳುಂವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ.ಗೋಲ್ಮಾಲ್ ಸಿಎಂ@siddaramaiahನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ…../
eesanje/url_46_90_8.txt ADDED
@@ -0,0 +1,6 @@
 
 
 
 
 
 
 
1
+ ಅತಿರೇಕದ ಅಭಿಮಾನ : 1 ವರ್ಷದ ಮಗುವಿಗೆ ಖೈದಿ ಬಟ್ಟೆ ಹಾಕಿ ನಂಬರ್ ನೀಡಿ ಹುಚ್ಚಾಟ
2
+ ಬೆಂಗಳೂರು,ಜು.2-ಕೊಲೆ ಆರೋಪದ ಮೇಲೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿದ್ದರೂ ಅವರ ಮೇಲಿನ ಅಭಿಮಾನಿಗಳ ಹುಚ್ಚು ಪ್ರೀತಿ ಮಾತ್ರ ಕಮ್ಮಿಯಾಗಿಲ್ಲ.ದರ್ಶನ್‌ ಮೇಲಿನ ಅಭಿಮಾನಕ್ಕಾಗಿ ಇಲ್ಲೊಬ್ಬ ಹುಚ್ಚು ಅಭಿಮಾನಿ ತನ್ನ ಹೆತ್ತ ಮಗುವನ್ನೇ ಖೈದಿ ಮಾದರಿ ಅಲಂಕರಿಸಿ ಜೈಲಿನಲ್ಲಿ ದರ್ಶನ್‌ಗೆ ನೀಡಿರುವ ಖೈದಿ ಸಂಖ್ಯೆಯನ್ನೇ ಹಾಕಿ ಹುಚ್ಚಾಟ ಮೇರೆದಿದ್ದಾನೆ
3
+ ತನ್ನ ಒಂದು ವರ್ಷದ ಮಗುವಿಗೆ ಖೈದಿಯ ರೀತಿ ಬಿಳಿ ಬಟ್ಟೆ ಹಾಕಿ ಪೋಟೋಶೂಟ್‌ ಮಾಡಿಸಿ ಖೈದಿ ನಂಬರ್‌, ಕೈ ಕೋಳದ ಮಾದರಿ ಚಿತ್ರ ಹಾಕಿ ಪೋಟೋಶೂಟ್‌ ಮಾಡಿಸಿದ್ದಾನೆ.
4
+ ಹಿಂದೆಲ್ಲ ಮಕ್ಕಳಿಗೆ ಕಷ್ಣನ ವೇಷ, ಸ್ವಾಮಿ ವಿವೇಕಾನಂದರು ವೇಷ, ಅಂಬೇಡ್ಕರ್‌ ರಂತಹ ಗಣ್ಯ ವ್ಯಕ್ತಿಗಳ ರೀತಿಯ ಪೋಟೋ ಶೂಟ್‌ ಮಾಡಿಸುವುದು ಟ್ರೆಂಡ್‌ ಆಗಿತ್ತು.ಆದರೆ ಈಗ ಬೆಳೆಯುವ ಮಗುವಿಗೆ ಖೈದಿ ರೀತಿ ಉಡುಪು ತೊಡಿಸಿ ಪೋಟೋ ಶೂಟ್‌ ಮಾಡಿಸಿರೋದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
5
+ ಕೊಲೆ ಆರೋಪದ ಮೇಲೆ ತಮ ನೆಚ್ಚಿನ ನಾಯಕ ಜೈಲು ಪಾಲಾದರೂ ಆತನ ಮೇಲಿನ ಅಭಿಮಾನದಿಂದ ಜನ ದೇವರಿಗೆ ವಿಶೇಷ ಪೂಜೆ ಮಾಡಿಸುವುದು, ಉರುಳು ಸೇವೆ ಮಾಡಿಸುವುದನ್ನು ಮಾಡಿಕೊಂಡು ಬರುತ್ತಿದ್ದಾರೆ.
6
+ ಕೆಲವರಂತೂ ಇನ್ನು ಪರಪ್ಪನ ಅಗ್ರಹಾರದ ಜೈಲಿನ ಮುಂದೆ ತಮ ನಾಯಕನ ಬಿಡುಗಡೆಗಾಗಿ ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ.ಇದೀಗ ತಮ ಮಗುವಿಗೆ ಖೈದಿ ಮಾದರಿ ಬಟ್ಟೆ, ನಂಬರ್‌ ತೊಡಿಸಿ ಹುಚ್ಚಾಟ ಪ್ರದರ್ಶಿಸಿರುವುದು ಅತಿಯಾಯ್ತು ಎನಿಸತೊಡಗಿದೆ.
eesanje/url_46_90_9.txt ADDED
@@ -0,0 +1,4 @@
 
 
 
 
 
1
+ ಪತ್ನಿಯನ್ನು ಇರಿದು ಕೊಂದ ಕಾನ್ಸ್‌ಟೇಬಲ್‌ ಮನೆಮುಂದೆ ಶವವಿಟ್ಟು ಪೋಷಕರ ಪ್ರತಿಭಟನೆ
2
+ ಹಾಸನ,ಜು.2-ಚಾಕುವಿನಿಂದ ಇರಿದು ಪತ್ನಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿ ಕಾನ್ಸ್‌ಟೇಬಲ್‌ ಲೋಕನಾಥ್‌ ನಿವಾಸದೆದುರು ಶವವಿಟ್ಟು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಮತಾ ಅವರು ನಿನ್ನೆ ಲೋಕನಾಥ್‌ ವಿರುದ್ಧ ಎಸ್‌‍ಪಿ ಕಚೇರಿಗೆ ದೂರು ನೀಡಲು ಆಗಮಿಸಿದಾಗ ಪತಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
3
+ ಈ ಸಂಬಂಧ ನ್ಯಾಯಕ್ಕಾಗಿ ಪೋಷಕರು ಲೋಕನಾಥ್‌ ನಿವಾಸದೆದುರು ಶವವನ್ನಿಟ್ಟು ಪ್ರತಿಭಟನೆ ನಡೆಸಿ ಆರೋಪಿ ತಂದೆ-ತಾಯಿಯನ್ನೂ ಕೂಡ ಬಂಧಿಸುವಂತೆ ಆಗ್ರಹಿಸಿದ್ದಾರೆ.ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಮಮತಾ ಪೋಷಕರು ಆಗ್ರಹಿಸಿದ್ದಾರೆ. ತಾಯಿಯ ಮೃತದೇಹದ ಮುಂದೆ ಮಕ್ಕಳು ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.
4
+ ಸ್ಥಳದಲ್ಲೇ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕಲ್ಪಿಸಲಾಗಿದೆ. ಲೋಕನಾಥ್‌ಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿರುವ ಮಮತಾ ಪೋಷಕರು ಆಕೆಯ ವಿರುದ್ಧವೂ ಸಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.
eesanje/url_46_91_1.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ನಕಲಿ ಸುದ್ದಿಗಳ ಪರಿಶೀಲನೆಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ಘಟಕ ಸ್ಥಾಪನೆ : ಸಿಎಂ
2
+ ಬೆಂಗಳೂರು,ಜು.1– ನಕಲಿ ಸುದ್ದಿಗಳ ಪರಿಶೀಲನೆಗೆ ಜಿಲ್ಲಾಮಟ್ಟದಲ್ಲಿ ವಿಶೇಷ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಧನಿಕ ಯುಗದಲ್ಲಿ ಹೊಸ ಸವಾಲುಗಳನ್ನು ಎದುರಿಸಲು ಮಾಧ್ಯಮಗಳು ಸಜ್ಜುಗೊಳ್ಳಬೇಕು ಎಂದು ಕರೆ ನೀಡಿದರು.
3
+ ನಗರದ ಪ್ರೆಸ್‌‍ಕ್ಲಬ್‌ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪ್ರೆಸ್‌‍ಕ್ಲಬ್‌ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣ ವೇಗವಾಗಿ ಜನರನ್ನು ಮುಟ್ಟುತ್ತಿದೆ. ಹಿಂದಿನ ದಿನಗಳಲ್ಲಿ ಸುದ್ದಿಗಾಗಿ ಟಿವಿ, ಪತ್ರಿಕೆಗಳು ಮತ್ತು ರೇಡಿಯೋವನ್ನು ಅವಲಂಬಿಸಬೇಕಿತ್ತು. ಈಗ ಅದಕ್ಕಿಂತಲೂ ವೇಗವಾಗಿ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ದೊರೆಯುತ್ತಿದೆ ಎಂದು ಹೇಳಿದರು.
4
+ ಸಾಮಾಜಿಕ ಜಾಲತಾಣದಿಂದ ಉಪಯೋಗದ ಜೊತೆಗೆ ಕೆಟ್ಟ ಪರಿಣಾಮವೂ ಇದೆ. ಅದನ್ನು ಉತ್ತಮ ರೀತಿಯಲ್ಲಿ ಸ್ವೀಕರಿಸಿದರೆ ಉಪಯೋಗವಾಗಲಿದೆ. ಇಲ್ಲವಾದರೆ ನಕಲಿ ಸುದ್ದಿಗಳು ಸಮಾಜಕ್ಕೆ ತೊಂದರೆಯುಂಟು ಮಾಡುತ್ತವೆ. ಇವುಗಳನ್ನು ಪರಿಶೀಲಿಸಲು ಮತ್ತು ನಿಯಂತ್ರಿಸಲು ಪ್ರತೀ ಜಿಲ್ಲಾ ಕೇಂದ್ರದಲ್ಲೂ ವಿಶೇಷ ಘಟಕಗಳನ್ನು ಆರಂಭಿಸಿದ್ದೇವೆ ಎಂದರು.
5
+ ನಕಲಿ ಸುದ್ದಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಯಾರು ಹಿತವರೋ ಅವರ ಪರವಾಗಿ ಹೆಚ್ಚು ಪ್ರಚಾರಗಳಾಗುತ್ತವೆ. ವಿರುದ್ಧವಾಗಿರುವವರನ್ನು ಟೀಕಿಸಲಾಗುತ್ತದೆ. ಸಾಮಾಜಿಕ ಜಾಲತಾಣಗಳು ಬೇಡ ಎಂದು ಹೇಳುವ ಪರಿಸ್ಥಿತಿ ಈಗಿಲ್ಲ. ಆದರೆ ಅವುಗಳ ಮೇಲೆ ನಿಯಂತ್ರಣ ಅಗತ್ಯವಿದೆ ಎಂದು ಹೇಳಿದರು.
6
+ ತಾವು ಸಾಮಾಜಿಕ ಜಾಲತಾಣವನ್ನು ನೋಡುವುದನ್ನೇ ಬಿಟ್ಟಿದ್ದೇನೆ. ಮೊಬೈಲ್‌ ಫೋನ್‌ ಕೂಡ ಇಟ್ಟುಕೊಂಡಿಲ್ಲ. ಈ ಮೊದಲು ಆರು ತಿಂಗಳ ಕಾಲ ಮೊಬೈಲ್‌ ಇಟ್ಟುಕೊಂಡಿದ್ದೆ. ಆಗ ರಾತ್ರಿಯೆಲ್ಲಾ ಕರೆಗಳು ಬರುತ್ತಿದ್ದವು. ನಿದ್ರೆ ಮಾಡಲು ಆಗುತ್ತಿರಲಿಲ್ಲ. ಅದಕ್ಕಾಗಿ ಫೋನ್‌ ಬಳಕೆ ನಿಲ್ಲಿಸಿದ್ದೇನೆ. ಸಿಬ್ಬಂದಿಗಳು ಮತ್ತು ಅಂಗರಕ್ಷಕರ ಫೋನ್‌ಗಳ ಮೂಲಕವೇ ನಾನು ಸಂಪರ್ಕ ಸಾಧಿಸುತ್ತೇನೆ ಎಂದು ಹೇಳಿದರು.
7
+ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್‌ ಮಾತನಾಡಿ, ಆಧುನಿಕ ತಂತ್ರಜ್ಞಾನ, ಕೃತಕ ಬುದ್ದಿಮತ್ತೆ, ಸಾಮಾಜಿಕ ಜಾಲತಾಣಗಳಿಂದಾಗಿ ಮಾಧ್ಯಮಗಳು ಮತ್ತು ಸುದ್ದಿಸಂಸ್ಥೆಗಳು ಅಪ್ರಸ್ತುತವಾಗುತ್ತಿವೆ. ರಾಜ್ಯದ ಯಾವ ಪತ್ರಿಕೆಯ ಪ್ರಸಾರ ಸಂಖ್ಯೆ 30 ಲಕ್ಷ ದಾಟಿಲ್ಲ. ಆದರೆ ವಾಟ್‌್ಸ ಆ್ಯಪ್‌ ಬಳಕೆದಾರ ಸಂಖ್ಯೆ 35 ಕೋಟಿ, ಫೇಸ್‌‍ಬುಕ್‌ನಲ್ಲಿ 39 ಕೋಟಿ, ಇನ್ಸ್ಟಾಗ್ರಾಮ್‌ನಲ್ಲಿ 36 ಕೋಟಿ ಚಂದಾದಾರರಿದ್ದಾರೆ.
8
+ ಸಾಮಾಜಿಕ ಜಾಲತಣಾದಲ್ಲಿ ಹೆಚ್ಚು ಸಕ್ರಿಯ ಹಾಗೂ ಜನಪ್ರಿಯವಾಗಿರುವವರಿಗೆ ಚುನಾವಣೆಯಲ್��ಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಈ ಹಿಂದೆ ನರೇಂದ್ರ ಮೋದಿ ಹಾಗೂ ಅಮಿತ್‌ ಷಾ ಹೇಳಿದ್ದರು.
9
+ ಏಕಕಾಲಕ್ಕೆ ನಮ ಸಂದೇಶಗಳು 32 ಲಕ್ಷ ವಾಟ್‌್ಸಆ್ಯಪ್‌ ಚಂದಾದಾರನ್ನು ತಲುಪುತ್ತವೆ. ಅಲ್ಲಿಂದ ಮುಂದೂಡಲ್ಪಟ್ಟ ಸಂದೇಶಗಳು ಸರಿಸುಮಾರು 80 ಕೋಟಿ ಜನರಿಗೆ ಹಂಚಿಕೆಯಾಗುತ್ತವೆ ಎಂದು ಬಿಜೆಪಿ ನಾಯಕರು ಹೇಳಿದ್ದು, ನಮಗೆ ಮಾಧ್ಯಮಗಳ ಅವಶ್ಯಕತೆಯೇ ಇಲ್ಲ ಎಂದು ನೀಡಿದ ಹೇಳಿಕೆಯನ್ನು ಸರಿಸಿಕೊಂಡರು.
10
+ ಇಂದು ಒಂದು ಭಾಗವಾದರೆ ಮತ್ತೊಂದು ದಿಕ್ಕಿನಲ್ಲಿ ಮಾಧ್ಯಮಗಳು ತಮಷ್ಟಕ್ಕೇ ತಾವೇ ಅಪ್ರಸ್ತುತವಾಗುತ್ತಿವೆ. ಕಳೆದ ಹತ್ತು ವರ್ಷಗಳಿಂದಲೂ ಯಾವ ಹಗರಣದ ಬಗ್ಗೆಯೂ ಚರ್ಚೆಯಾಗಿಲ್ಲ. ಪ್ರೊಫೈಲ್‌, ನೋಟು ಅಮಾನೀಕರಣ, ಪಿಎಂ ಕೇಸ್‌‍, ಚೀನಾ ಗಡಿ ಒತ್ತುವರಿ ಸೇರಿ ಯಾವ ವಿಚಾರಗಳು ಮಾಧ್ಯಮಗಳ ಚರ್ಚೆಯ ವಸ್ತುವಾಗಿಲ್ಲ. ಕರ್ನಾಟಕ ನಕಲಿ ಸುದ್ದಿಗಳ ಫ್ಯಾಕ್ಟರಿಯಾಗಿದೆ. ಕೆಲವು ಮಾಧ್ಯಮಗಳಂತೂ ಜನರ ಬೌದ್ಧಿಕತೆ ಮೇಲೆಯೇ ದಾಳಿ ಮಾಡಿವೆ. ಹೀಗಾಗಿ ಜನರೂ ಕೂಡ ಮಾಧ್ಯಮಗಳನ್ನು ಗಂಭೀರವಾಗಿ ತೆಗೆದುಕೊಳ್ಳುವುದು ನಿಂತಿದೆ ಎಂದು ಹೇಳಿದರು.
11
+ ನಕಲಿ ಸುದ್ದಿಗಳ ಬಗ್ಗೆ ಪಠ್ಯಕ್ರಮದಲ್ಲಿ ವಿಷಯ ಅಳವಡಿಕೆಯಾಗಬೇಕು. ರಾಜ್ಯದ ಮಾಧ್ಯಮ ಸಂಸ್ಥೆಯವರು ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ಅಪಾಯಕಾರಿ ಪರಿಸ್ಥಿತಿಯಿಂದ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ ಎಂದರು.
12
+ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌, ವಾರ್ತಾ ಇಲಾಖೆ ಆಯುಕ್ತ ಸೂರಳ್ಕರ್‌ ವಿಕಾಸ್‌‍ ಕಿಶೋರ್‌, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌, ಪ್ರೆಸ್‍ ಕ್ಲಬ್‌ ಅಧ್ಯಕ್ಷ ಆರ್‌.ಶ್ರೀಧರ್‌, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಉಪಸ್ಥಿತರಿದ್ದರು.
eesanje/url_46_91_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಗೋಬಿ-ಕಬಾಬ್‌ ನಂತರ ಈಗ ಶವರ್ಮಾ ಬ್ಯಾನ್‌ ಮಾಡಲು ರಾಜ್ಯ ಸರ್ಕಾರ ಚಿಂತನೆ
2
+ ಬೆಂಗಳೂರು,ಜೂ.30-ಗೋಬಿ ಮಂಚೂರಿ ಹಾಗೂ ಕಬಾಬ್‌ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್‌ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
3
+ ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ಬೆಂಗಳೂರಿನಲ್ಲಿ ಶವರ್ಮಾ ಗುಣಮಟ್ಟ ಪರಿಶೀಲನೆ ನಡೆಸಿದ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಬೆಚ್ಚಿ ಬೀಳಿಸುವ ಅಂಶ ಕಂಡು ಬಂದು ಬಂದಿದೆ. ಶವರ್ಮಾಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ, ಈಸ್ಟ್‌ ಪತ್ತೆಯಾಗಿದೆ. ಬೆಂಗಳೂರು ಮಾತ್ರವಲ್ಲ ಹುಬ್ಬಳ್ಳಿ, ಮೈಸೂರು, ತುಮಕೂರು, ಮಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಪರೀಕ್ಷೆ ನಡೆಸಲಾಗಿದೆ.
4
+ ಶವರ್ಮಾ ತಯಾರಿಕೆಯಲ್ಲಿ ನೈಮರ್ಲ್ಯದ ಕೊರತೆ ಕಂಡು ಬರುತ್ತಿದೆ. ಅಲ್ಲದೆ ಧೀರ್ಘ ಕಾಲದವರೆಗೂ ಶೇಖರಣೆ ಮಾಡುವುದರಿಂದ ಇದರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ, ಈಸ್ಟ್‌ ಉತ್ಪತ್ತಿಯಾಗಿ ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಶವರ್ಮಾ ತಿನ್ನುವುದರಿಂದ ಆರೋಗ್ಯದಲ್ಲಿ ಭಾರೀ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
5
+ ಮಾಧ್ಯಮಗಳಲ್ಲಿ ಶವರ್ಮಾ ಸೇವಿಸಿ ಫುಡ್‌ ಪಾಯ್ಸನ್‌ ಆಗಿರುವ ಕುರಿತು ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ವಲಯ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೈಸೂರು, ತುಮಕೂರು, ಧಾರವಾಡ, ಮಂಗಳೂರು, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಪೋರೇಷನ್‌ ವ್‌ಯಾಪ್ತಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಶವರ್ಮಾದ ಆಹಾರ ಮಾದರಿಗಳನ್ನು ವಿಶ್ಲೇಷಣೆಗೊಳಪಡಿಸಲಾಗಿದೆ.
6
+ ಒಟ್ಟು 17 ಮಾದರಿಗಳಲ್ಲಿ 9 ಮಾದರಿಗಳು ಸುರಕ್ಷಿತವಾಗಿದ್ದರೆ 8 ಮಾದರಿಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಈಸ್ಟ್‌ ಕಂಡು ಬಂದಿರುವುದರಿಂದ ಅಸುರಕ್ಷಿತ ಎಂದು ನಿರ್ಧರಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹೇಳಿದೆ.
7
+ ಅಸುರಕ್ಷಿತ ಎಂದು ವರದಿಯಾಗಿರುವ ಆಹಾರ ಮಾದರಿಗಳ ತಯಾರಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಶವರ್ಮಾ ತಯಾರಕರು ಆಹಾರ ತಯಾರಿಕೆ, ಸಂಗ್ರಹಣೆ ಮತ್ತು ವಿತರಣೆಯ ಸಂದರ್ಭದಲ್ಲಿ ಸಂಪೂರ್ಣ ನೈರ್ಮಲ್ಯತೆ ಮತ್ತು ಗುಣಮಟ್ಟವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ 2006ರ ಶೆಡ್ಯೂಲ್‌ 4ರ ಅನುಸಾರ ಕಾಪಾಡಲು ಸೂಚಿಸಲಾಗಿದೆ.
8
+ ಜತೆಗೆ ಶವರ್ಮಾವನ್ನು ಪ್ರತಿ ದಿನ ಹೊಸದಾಗಿ ತಯಾರಿಸಿ ತಾಜಾ ಸ್ಥಿತಿಯಲ್ಲಿ ಮಾರಾಟ ಮಾಡಲು ಸೂಚಿಸಲಾಗಿದೆ. ಅಲ್ಲದೆ ಎಲ್ಲ ಶವರ್ಮಾ ಆಹಾರ ತಯಾರಕರು ತಮ ಉದ್ದಿಮೆಗೆ ಎಫ್‌ಎಸ್‌‍ಎಸ್‌‍ಎಐ ನೋಂದಣಿ ಅಥವಾ ಪರವಾನಿಗೆಯನ್ನು ಪಡೆದುಕೊಳ್ಳುವುದಲ್ಲದೇ ಅದನ್ನು ತಮ ವ್ಯಾಪಾರ ಸ್ಥಳದಲ್ಲಿ ಪ್ರದರ್ಶಿಸಲು ಸೂಚಿಸಿದೆ. ಜತೆಗೆ ಸಾರ್ವಜನಿಕರು ನೋಂದಣಿ / ಪರವಾನಿಗೆಯನ್ನು ಪಡೆದುಕೊಂಡ ಮಾರಾಟಗಾರರಿಂದಲೇ ಶವರ್ಮಾವನ್ನು ಖದೀದಿಸಲು ಸೂಚಿಸಲಾಗಿದೆ.
9
+ ಮುಂದಿನ ಪರಿಶೀಲನೆ ವೇಳೆ ಆಹಾರ ತಯಾರಕರು ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಪ್ರಕಟಣೆ ತಿಳಿಸಿದೆ.
eesanje/url_46_91_11.txt ADDED
@@ -0,0 +1,9 @@
 
 
 
 
 
 
 
 
 
 
1
+ ದೆಹಲಿಯಲ್ಲಿ ಖರ್ಗೆ ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದ ಡಿಕೆಶಿ
2
+ ಬೆಂಗಳೂರು,ಜೂ30– ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಭೇಟಿ ನೀಡಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.ದೆಹಲಿ ಪ್ರವಾಸದಲ್ಲಿರುವ ಅವರು, ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ನಡೆಯುವ ಉಪಚುನಾವಣೆಗಳ ಸಿದ್ಧತೆ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಿದ್ದಾರೆ.
3
+ ಜೊತೆಗೆ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಕುರಿತು ರಾಜ್ಯದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ.ವಿಧಾನಸಭೆ ಚುನಾವಣೆಯ ಬಳಿಕ ಸರ್ಕಾರ ರಚನೆ ವೇಳೆ ಹೈಕಮಾಂಡ್‌ ನಾಯಕರ ಜೊತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರು ರಹಸ್ಯ ಚರ್ಚೆ ನಡೆಸಿದ್ದು, ಅನಂತರ ಸರ್ಕಾರ ರಚನೆಯಾಗಿದೆ. ಸುಗಮವಾದ ಆಡಳಿತ ನಡೆಯುತ್ತಿದೆ.
4
+ ಇದರ ನಡುವೆ ಅಪ್ರಚೋದಿತವಾಗಿ ಸಿದ್ದರಾಮಯ್ಯ ಅವರ ಬಣದ ನಾಯಕರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಬಗ್ಗೆ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ.ಮತ್ತೊಂದೆಡೆ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಮುಖ್ಯಮಂತ್ರಿ ಬದಲಾವಣೆ ಅಥವಾ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ನೀಡಿ ಗೊಂದಲವುಂಟು ಮಾಡುತ್ತಿದ್ದಾರೆ.
5
+ ಪರಸ್ಪರ ಈ ಗೊಂದಲಗಳಿಂದಾಗಿ ಪಕ್ಷದಲ್ಲಿ ಭಿನ್ನಮತ ಹಾಗೂ ಗುಂಪುಗಾರಿಕೆ ತಲೆದೋರುವಂತಾಗಿವೆ. ಆರಂಭದಿಂದಲೂ ಮುಖ್ಯಮಂತ್ರಿಯವರ ಜೊತೆ ಸೌಹಾರ್ದಯುತವಾದ ಸಂಬಂಧ ರೂಢಿಸಿಕೊಂಡಿರುವ ಡಿ.ಕೆ.ಶಿವಕುಮಾರ್‌ ಆಡಳಿತಕ್ಕೆ ಹೆಗಲಾಗಿದ್ದಾರೆ.ಇದರ ನಡುವೆ ಅನಪೇಕ್ಷಣೀಯವಾಗಿ ಹೇಳಿಕೆಗಳು ಹೊರಬರುತ್ತಿರುವುದು ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರ ಉಂಟುಮಾಡುತ್ತಿದೆ ಹಾಗೂ ಕಾರ್ಯಕರ್ತರಲ್ಲೂ ಗೊಂದಲ ಹುಟ್ಟುಹಾಕುತ್ತಿದೆ.
6
+ ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಯಾವುದೇ ಚರ್ಚೆಗೆ ಅವಕಾಶವಾಗದಂತೆ ಕಡಿವಾಣ ಹಾಕಲು ಡಿ.ಕೆ.ಶಿವಕುಮಾರ್‌ರವರು ಮಲ್ಲಿಕಾರ್ಜುನ ಖರ್ಗೆಯವರ ಬಳಿ ಮನವಿ ಮಾಡಿದ್ದಾರೆ.
7
+ ಲೋಕಸಭಾ ಚುನಾವಣೆಗೂ ಮುನ್ನ ಇದೇ ರೀತಿಯ ಚರ್ಚೆಗಳು ನಡೆದಾಗ ಮಧ್ಯಪ್ರವೇಶಿಸಿದ ಮಲ್ಲಿಕಾರ್ಜುನ ಖರ್ಗೆಯವರು, ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾವನೆಗಳಿಲ್ಲ. ಈ ಕುರಿತು ಚರ್ಚೆಗಳು ಅನಗತ್ಯ ಎಂದು ಸ್ಪಷ್ಟಪಡಿಸಿದರು. ಅದರ ಪ್ರಯುಕ್ತ ಎಲ್ಲಾ ಚರ್ಚೆಗಳಿಗೆ ಬ್ರೇಕ್‌ ಬಿದ್ದಿತ್ತು. ಚುನಾವಣೆ ಬಳಿಕ ಮತ್ತೆ ಚರ್ಚೆಗಳು ಆರಂಭವಾಗಿವೆ.
8
+ ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಂತದಲ್ಲಿ ಇಂತಹ ಚರ್ಚೆಗಳು ಗೊಂದಲ ಉಂಟುಮಾಡಬಹುದು ಎಂಬ ಆತಂಕ ಕಾಡಲಾರಂಭಿಸಿದೆ. ಅದಕ್ಕಾಗಿ ಡಿ.ಕೆ.ಶಿವಕುಮಾರ್‌ ಹೈಕಮ���ಂಡ್‌ ಮೊರೆ ಹೋಗಿದ್ದು, ಗೊಂದಲ ಉಂಟುಮಾಡುವ ಯಾವುದೇ ಹೇಳಿಕೆಗಳನ್ನು ನೀಡದಂತೆ ರಾಜ್ಯ ಸಚಿವರು ಹಾಗೂ ನಾಯಕರಿಗೆ ಕಡಿವಾಣ ಹಾಕಲು ಮನವಿ ಮಾಡಿದ್ದಾರೆ.
9
+ ಚನ್ನಪಟ್ಟಣ, ಶಿಗ್ಗಾವು ಮತ್ತು ಸಂಡೂರು ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಹಾಗೂ ಮತ್ತಿತರ ವಿಚಾರಗಳ ಬಗ್ಗೆಯೂ ಖರ್ಗೆಯವರೊಂದಿಗೆ ಡಿ.ಕೆ.ಶಿವಕುಮಾರ್‌ ಚರ್ಚೆ ನಡೆಸಿದ್ದಾರೆ.
eesanje/url_46_91_12.txt ADDED
@@ -0,0 +1,18 @@
 
 
 
 
 
 
 
 
 
 
 
 
 
 
 
 
 
 
 
1
+ ನಾಳೆಯಿಂದ ದೇಶದಲ್ಲಿ 3 ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿ, ಇಲ್ಲಿದೆ ಹೆಚ್ಚಿನ ಮಾಹಿತಿ
2
+ ನವದೆಹಲಿ,ಜೂ.30 –ಭಾರತದ ಆಡಳಿತ ವ್ಯವಸ್ಥೆ ಹೊಸ ಸ್ವರೂಪ ನೀಡುವ ನಿಟ್ಟಿನಲ್ಲಿ ಹಳೆಯ ಕಾನೂನುಗಳಿಗೆ ಮಹತ್ತರ ಬದಲಾವಣೆ ಮಾಡಿ ರೂಪಿಸಲಾಗಿರುವ ಭಾರತೀಯ ನ್ಯಾಯ ಸಂಹಿತಾ (ಬಿಎನ್‌‍ಎಸ್‌‍), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌‍ಎಸ್‌‍ಎಸ್‌‍), ಭಾರತೀಯ ಸಾಕ್ಷಿ ಅಧಿನಿಯಮ (ಬಿಎಸ್‌‍ಎ) ಕಾನೂನುಗಳು ನಾಳೆಯಿಂದ (ಜುಲೈ 1 ರಿಂದ ) ದೇಶಾದ್ಯಂತ ಜಾರಿಗೆ ಬರಲಿದೆ.
3
+ ಹೊಸ ಕಾನೂನುಗಳನ್ನು 2023ರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈಚೆಗೆ ಈ ಕಾಯ್ದೆಗಳಿಗೆ ಸಹಿ ಹಾಕಿದ್ದರು. ಮುಂದಿನ ವಾರದಿಂದ ಹೊಸ ಅಪರಾಧ ಕಾನೂನುಗಳನ್ನು ಜಾರಿಗೆ ತರಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಂಪೂರ್ಣ ಸಜ್ಜಾಗಿವೆ.
4
+ ಕಳೆದ ವರ್ಷ ಆಗಸ್ಟ್‌ನಲ್ಲಿ ಸಂಸತ್ತಿನ ಉಭಯ ಸದನಗಳಾದ ಲೋಕಸಭಾ ಹಾಗೂ ರಾಜ್ಯಸಭೆಯಲ್ಲಿ ಪರಿಚಯಿಸಲಾದ ಈ ಕಾನೂನುಗಳು ಕ್ರಮವಾಗಿ ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ , ಕ್ರಿಮಿನಲ್‌ ಪ್ರೊಸೀಜರ್‌ ಕೋಡ್‌ ಮತ್ತು 1872 ರ ಭಾರತೀಯ ಸಾಕ್ಷಿ ಕಾಯಿದೆಯನ್ನು ಬದಲಿಸುತ್ತವೆ.
5
+ ಇವುಗಳ ಪ್ರಚಾರಕ್ಕಾಗಿ 40 ಲಕ್ಷ ಕಾರ್ಯಕರ್ತರು, 5.65 ಲಕ್ಷ ಪೊಲೀಸ್‌‍ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿತ್ತು.ಹೊಸ ಕಾನೂನುಗಳ ಜಾರಿ ಮತ್ತು ಮಾಹಿತಿಯ ವಿಚಾರದಲ್ಲಿ ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿರಂತರ ಸಭೆಗಳನ್ನು ನಡೆಸಿದೆ.
6
+ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ವೆಬಿನಾರ್ಗಳ ಮೂಲಕ ಹೊಸ ಕಾನೂನುಗಳ ಬಗ್ಗೆ ಮಾಹಿತಿ ನೀಡಿದೆ. ಇದಕ್ಕಾಗಿ ಸುಮಾರು 40 ಲಕ್ಷ ತಳಮಟ್ಟದ ಕಾರ್ಯಕರ್ತರನ್ನು ಬಳಸಿಕೊಂಡಿದೆ.ಕಾನೂನು ವ್ಯವಹಾರಗಳ ಇಲಾಖೆಯು ದೆಹಲಿಯಲ್ಲಿ ನಾಲ್ಕು ಸಮೇಳನಗಳನ್ನು ನಡೆಸಿದೆ. ಇದರಲ್‌‍ಗ ಭಾರತದ ಮುಖ್ಯ ನ್ಯಾಯಾಧೀಶರು, ಸುಪ್ರೀಂ ಕೋರ್ಟ್‌ ಮತ್ತು ಹೈಕೋಟ್ರ್ಗಳ ನ್ಯಾಯಾಧೀಶರು ಮತ್ತು ಕಾನೂನು ತಜ್ಞರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
7
+ ಉನ್ನತ ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ, ವಿಶ್ವವಿದ್ಯಾಲಯ ಅನುದಾನ ಆಯೋಗವು 1,200 ವಿಶ್ವವಿದ್ಯಾನಿಲಯಗಳು ಮತ್ತು 40 ಸಾವಿರ ಕಾಲೇಜುಗಳಲ್ಲಿ ಪ್ರಚುರಪಡಿಸಿದೆ.ಭಾರತೀಯ ನ್ಯಾಯ ಸಂಹಿತಾ 163 ವರ್ಷಗಳ ಹಳೆಯ ಐಪಿಸಿ ಅನ್ನು ಬದಲಿಸುತ್ತದೆ, ದಂಡ ಕಾನೂನಿನಲ್ಲಿ ಗಮನಾರ್ಹ ಬದಲಾವಣೆಗಳನ್ನು ತರುತ್ತದೆ. ಲೈಂಗಿಕ ಅಪರಾಧಗಳು ಕಠಿಣ ಕ್ರಮಗಳನ್ನು ನೋಡುತ್ತವೆ, ಅದನ್ನು ಪೂರೈಸುವ ಉದ್ದೇಶವಿಲ್ಲದೆ ಮದುವೆಗೆ ಭರವಸೆ ನೀಡುವ ಮೂಲಕ ಮೋಸದ ಲೈಂಗಿಕ ಸಂಭೋಗದಲ್ಲಿ ತೊಡಗುವವರಿಗೆ ಕಾನೂನು ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್���ು ವಿಧಿಸುತ್ತದೆ. ಉದ್ಯೋಗ, ಬಡ್ತಿ ಅಥವಾ ಮದುವೆಗೆ ಸಂಬಂಧಿಸಿದ ಸುಳ್ಳು ಭರವಸೆಗಳನ್ನು ಒಬ್ಬರ ಗುರುತನ್ನು ಮರೆಮಾಚುವ ಮೂಲಕ ಹೊಸ ಕಾನೂನು ಮೋಸವನ್ನು ಸಹ ಪರಿಹರಿಸುತ್ತದೆ.
8
+ ಸಂಘಟಿತ ಅಪರಾಧವು ಈಗ ಸಮಗ್ರ ಕಾನೂನು ಪರಿಶೀಲನೆಯನ್ನು ಎದುರಿಸುತ್ತಿದೆ, ಇದು ಕಾನೂನುಬಾಹಿರ ಚಟುವಟಿಕೆಗಳ ವಿಶಾಲ ವ್ಯಾಪ್ತಿಯನ್ನು ಒಳಗೊಂಡಿದೆ. ಅಪಹರಣ, ದರೋಡೆ, ವಾಹನ ಕಳ್ಳತನ, ಸುಲಿಗೆ, ಭೂ ಕಬಳಿಕೆ, ಗುತ್ತಿಗೆ ಹತ್ಯೆ, ಆರ್ಥಿಕ ಅಪರಾಧಗಳು, ಸೈಬರ್‌ ಅಪರಾಧಗಳು ಮತ್ತು ವ್ಯಕ್ತಿಗಳ ಕಳ್ಳಸಾಗಣೆ, ಔಷಧಗಳು, ಶಸ್ತ್ರಾಸ್ತ್ರಗಳು, ಅಥವಾ ಅಕ್ರಮ ಸರಕುಗಳು ಅಥವಾ ಸೇವೆಗಳು ಸೇರಿವೆ.
9
+ ವೇಶ್ಯಾವಾಟಿಕೆ ಅಥವಾ ಸುಲಿಗೆಗಾಗಿ ಮಾನವ ಕಳ್ಳಸಾಗಣೆ, ಸಂಘಟಿತ ಅಪರಾಧ ಸಿಂಡಿಕೇಟ್‌‍ಗಳ ಸದಸ್ಯರಾಗಿ ಅಥವಾ ಅಂತಹ ಸಿಂಡಿಕೇಟ್‌ಗಳ ಪರವಾಗಿ ಸಂಗೀತ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಗಳು ಅಥವಾ ಗುಂಪುಗಳು ನಡೆಸಿದರೆ, ತೀವ್ರವಾದ ದಂಡವನ್ನು ಎದುರಿಸಬೇಕಾಗುತ್ತದೆ.
10
+ ಹಿಂಸಾಚಾರ, ಬೆದರಿಕೆ, ಬೆದರಿಕೆ, ದಬ್ಬಾಳಿಕೆ, ಅಥವಾ ನೇರ ಅಥವಾ ಪರೋಕ್ಷ ವಸ್ತು ಲಾಭಕ್ಕಾಗಿ ಇತರ ಕಾನೂನುಬಾಹಿರ ವಿಧಾನಗಳ ಮೂಲಕ ಕಾರ್ಯಗತಗೊಳಿಸಲಾದ ಈ ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ1973 ರ ಕ್ರಿಮಿನಲ್‌ ಪ್ರೊಸೀಜರ್‌ ಕೋಡ್‌ (ಸಿಆರ್‌ ಪಿ ಸಿ) ಅನ್ನು ಬದಲಿಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾರ್ಯವಿಧಾನದ ಕಾನೂನಿನಲ್ಲಿ ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತದೆ.
11
+ ಒಂದು ಗಮನಾರ್ಹವಾದ ನಿಬಂಧನೆಯು ವಿಚಾರಣಾಧೀನ ಕೈದಿಗಳಿಗೆ, ಜೀವಾವಧಿ ಶಿಕ್ಷೆ ಅಥವಾ ಬಹು ಆರೋಪಗಳನ್ನು ಹೊಂದಿರುವ ಪ್ರಕರಣಗಳನ್ನು ಹೊರತುಪಡಿಸಿ, ಮೊದಲ ಬಾರಿಗೆ ಅಪರಾಧಿಗಳು ತಮ್ಮ ಗರಿಷ್ಠ ಶಿಕ್ಷೆಯ ಮೂರನೇ ಒಂದು ಭಾಗವನ್ನು ಪೂರೈಸಿದ ನಂತರ ಜಾಮೀನು ಪಡೆಯಲು ಅವಕಾಶ ಮಾಡಿಕೊಡುತ್ತದೆ, ಇದು ಅಂಡರ್‌ ಟ್ರಯಲ್‌‍ಗಳು ಕಡ್ಡಾಯ ಜಾಮೀನಿಗೆ ಅರ್ಹತೆ ಪಡೆಯುವುದು ಕಷ್ಟಕರವಾಗಿದೆ. .ಫೋರೆನ್ಸಿಕ್‌ ತನಿಖೆಯು ಈಗ ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗುವ ಅಪರಾಧಗಳಿಗೆ ಕಡ್ಡಾಯವಾಗಿದೆ, ಫೋರೆನ್ಸಿಕ್‌ ತಜ್ಞರು ಅಪರಾಧದ ದೃಶ್ಯಗಳಲ್ಲಿ ಸಾಕ್ಷ್ಯವನ್ನು ಸಂಗ್ರಹಿಸುತ್ತಾರೆ ಮತ್ತು ದಾಖಲಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳುತ್ತಾರೆ.
12
+ ಒಂದು ರಾಜ್ಯವು ವಿಧಿವಿಜ್ಞಾನ ಸೌಲಭ್ಯವನ್ನು ಹೊಂದಿಲ್ಲದಿದ್ದರೆ, ಅದು ಇನ್ನೊಂದು ರಾಜ್ಯದಲ್ಲಿ ಸೌಲಭ್ಯವನ್ನು ಬಳಸುತ್ತದೆ.ಭಾರತೀಯ ಸಾಕ್ಷಿ ಅಧಿನಿಯಮ್‌ಭಾರತೀಯ ಸಾಕ್ಷಿ ಅಧಿನಿಯಮ್‌ (ಬಿಎಸ್‌‍ ಎ), ಎವಿಡೆನ್‌್ಸ ಆಕ್ಟ್‌ ಬದಲಿಗೆ, ನಿರ್ಣಾಯಕ ನವೀಕರಣಗಳನ್ನು ಪರಿಚಯಿಸುತ್ತದೆ,ಹೊಸ ಮಸೂದೆಯು ಎಲೆಕ್ಟ್ರಾನಿಕ್‌ ಪುರಾವೆಗಳ ಮೇಲಿನ ನಿಯಮಗಳನ್ನು ಸರಳಗೊಳಿಸುತ್ತದೆ ಮತ್ತು ದ್ವಿತೀಯ ಸಾಕ್ಷ್ಯದ ವ್ಯಾಪ್ತಿಯನ್ನು ವಿಸ್ತರಿಸುತ್ತದೆ. ಇದು ಎಲೆಕ್ಟ್ರಾನಿಕ್‌ ದಾ���ಲೆಗಳಿಗಾಗಿ ವಿವರವಾದ ಬಹಿರಂಗಪಡಿಸುವಿಕೆಯ ಸ್ವರೂಪಗಳ ಅಗತ್ಯವಿದೆ, ಕೇವಲ ಅಫಿಡವಿಟ್‌ಗಳನ್ನು ಮೀರಿ ಚಲಿಸುತ್ತದೆ.
13
+ ಇದು ಎಲೆಕ್ಟ್ರಾನಿಕ್‌ ದಾಖಲೆಗಳ ವಿಷಯಗಳ ನೈಜತೆಯ ಬಗ್ಗೆ ಕೇವಲ ಅಫಿಡವಿಟ್‌ ಮತ್ತು ಸ್ವಯಂ-ಘೋಷಣೆಯಿಂದ ನಿಯಂತ್ರಿಸಲ್ಪಡುವ ಪ್ರಮಾಣಪತ್ರದ ವಿವರವಾದ ಬಹಿರಂಗಪಡಿಸುವಿಕೆಯ ಸ್ವರೂಪವನ್ನು ಸೂಚಿಸುತ್ತದೆ. ದ್ವಿತೀಯ ಸಾಕ್ಷ್ಯದ ವಾಖ್ಯಾನವನ್ನು ವಿಸ್ತರಿಸಲಾಗಿದೆ ಮತ್ತು ಬಿಲ್‌ ಲಿಖಿತ ಪ್ರವೇಶಗಳನ್ನು ದ್ವಿತೀಯ ಸಾಕ್ಷಿಯಾಗಿ ಪರಿಗಣಿಸುವ ಮೂಲಕ ಎವಿಡೆನ್ಸ್ ಆಕ್ಟ್‌ ಲೋಪ ದೋಷವನ್ನು ಪ್ಲಗ್‌ ಮಾಡುತ್ತದೆ.
14
+ ಆನ್‌ ಲೈನ್‌ ನಲ್ಲಿ ದೂರು ನೀಡಲು ಅವಕಾಶ ಯಾವುದೇ ವ್‌ಯಕ್ತಿಯು ದೈಹಿಕವಾಗಿ ಪೊಲೀಸ್‌‍ ಠಾಣೆಗೆ ತೆರಳಿ ದೂರು ನೀಡುವ ಅಗತ್ಯವಿಲ್ಲ. ಎಲೆಕ್ಟ್ರಾನಿಕ್‌ ಸಂವಹನದ ಮೂಲಕ ವಿಷಯದ ಮಾಹಿತಿ ನೀಡಬಹುದು. ಇದು ಸುಲಭ ಮತ್ತು ತ್ವರಿತವಾಗಿ ವರದಿ ಮಾಡಲು ಅನುವು ನೀಡುತ್ತದೆ. ಪೊಲೀಸರಿಂದ ತ್ವರಿತ ಕ್ರಮವೂ ಸಿಗಲಿದೆ. (ಬಿಎನ್‌‍ಎಸ್‌‍ಎಸ್‌‍ 173 ಸೆಕ್ಷನ್‌‍)ಯಾವುದೇ ಪೊಲೀಸ್‌‍ ಠಾಣೆಯಲ್ಲಿ ವ್‌ಯಕ್ತಿಯು ಎಫ್‌‍ಐಆರ್‌ ದಾಖಲಿಸಬಹುದು. ಇದು ಕಾನೂನು ಪ್ರಕ್ರಿಯೆಗಳನ್ನು ಶೀಘ್ರವಾಗಿಸುತ್ತದೆ.
15
+ ಎಫ್‌‍ಐಆರ್‌ನ ಉಚಿತ ಪ್ರತಿ:ದೂರುದಾರರು ಮತ್ತು ಸಂತ್ರಸ್ತರು ಎಫ್‌‍ಐಆರ್ನ ಪ್ರತಿಯನ್ನು ಉಚಿತವಾಗಿ ಪಡೆಯಲಿದ್ದಾರೆ. ಅಪರಾಧದಲ್ಲಿ ತಮ್ಮ ಭಾಗವಹಿಸುವಿಕೆಯನ್ನು ತಿಳಿದುಕೊಳ್ಳಬಹುದು. (ಬಿಎನ್‌‍ಎಸ್‌‍ಎಸ್‌‍ 173 ಸೆಕ್ಷನ್‌‍)ತ್ವರಿತಗತಿ ತನಿಖೆಗಳು ಹೊಸ ಕಾನೂನುಗಳು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ತನಿಖೆಗೆ ಆದ್ಯತೆ ನೀಡಿವೆ. ಮಾಹಿತಿಯನ್ನು ದಾಖಲಿಸಿದ ಎರಡು ತಿಂಗಳೊಳಗೆ ಸಮಯೋಚಿತವಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸುತ್ತದೆ.
16
+ ಮುಖ್ಯ ಬದಲಾವಣೆ :
17
+ *ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌‍)- ಹಿಂದಿನ 511 ಸೆಕ್ಷನ್‌ಗಳ ಬದಲಾಗಿ ಈಗ 358 ಸೆಕ್ಷನ್‌ಗಳನ್ನು ಒಳಗೊಂಡಿದೆ.*20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ.*33 ಅಪರಾಧಗಳ ಶಿಕ್ಷೆಯ ಅವಧಿ ಹೆಚ್ಚಿಸಲಾಗಿದೆ.*83 ಅಪರಾಧಗಳಲ್ಲಿ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ.*23 ಅಪರಾಧಗಳಿಗೆ ಕಡ್ಡಾಯ ಕನಿಷ್ಟ ಶಿಕ್ಷೆಯನ್ನು ಪರಿಚಯಿಸಲಾಗಿದೆ.*19 ಸೆಕ್ಷನ್‌ಗಳನ್ನು ರದ್ದುಪಡಿಸಲಾಗಿದೆ.*ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌‍ಎಸ್‌‍)- ಹಿಂದಿನ 484 ಸೆಕ್ಷನ್‌ಗಳ ಬದಲಾಗಿ ಹೊಸ ಕಾನೂನು 531 ಸೆಕ್ಷನ್‌ಗಳನ್ನು ಒಳಗೊಂಡಿದೆ.*177 ಕಲಂಗಳನ್ನು ಬದಲಾಯಿಸಲಾಗಿದೆ ಮತ್ತು 9 ಸೆಕ್ಷನ್‌ಗಳನ್ನು ಸೇರಿಸಲಾಗಿದೆ.*44 ಹೊಸ ಕಲಂಗಳು ಮತ್ತು ಸ್ಪಷ್ಟೀಕರಣಗಳನ್ನು ಸೇರಿಸಲಾಗಿದೆ.*35 ಸೆಕ್ಷನ್‌ಗಳಲ್ಲಿ ಸಮಯ ನಿರ್ಧಾರ ಮತ್ತು ಆಡಿಯೋ-ವಿಡಿಯೋ ವ್ಯವಸ್ಥೆಯನ್ನು ಸೇರಿಸಲಾಗಿದೆ.*14 ಸೆಕ್ಷನ್‌ಗಳನ್ನು ರದ್ದುಪಡಿಸಲಾಗಿದೆ.*ಭಾರತೀಯ ಸಾಕ್ಷ್ಯ ಅಧಿನಿಯಮ (ಬಿಎಸ್‌‍ಎ)- ಹೊಸ ಕಾನೂನು ಹಿಂದಿನ 166 ಸೆಕ್ಷನ್‌ಗಳ ಬದಲು 170 ಸೆಕ್ಷನ್‌ಗಳನ್ನು ಒಳಗೊಂಡಿದೆ.
18
+ *24 ಕಲಂಗಳನ್ನು ಬದಲಾಯಿಸಲಾಗಿದೆ.*2 ಹೊಸ ಕಲಂಗಳು ಮತ್ತು 6 ಉಪಕಲಂಗಳನ್ನು ಸೇರ್ಪಡೆ ಮಾಡಲಾಗಿದೆ.*6 ಸೆಕ್ಷನ್‌ಗಳನ್ನು ರದ್ದುಪಡಿಸಲಾಗಿದೆ.ಈ ಹೊಸ ಕಾನೂನುಗಳು ಅಪರಾಧ, ನ್ಯಾಯ ಮತ್ತು ಸಾಕ್ಷ್ಯಾಧಾರಗಳ ವ್ಯವಹಾರಗಳನ್ನು ಸುಧಾರಿಸಲು ತ್ವರಿತ ನ್ಯಾಯ ನೀಡಲು ಸಹಕರಿಸಲಿವೆ.
eesanje/url_46_91_2.txt ADDED
@@ -0,0 +1,7 @@
 
 
 
 
 
 
 
 
1
+ ಹಾಸನ ಎಸ್‌ಪಿ ಕಚೇರಿ ಮುಂದೆ ಪತ್ನಿಯನ್ನು ಕೊಂದ ಪೊಲೀಸ್ ಕಾನ್‍ಸ್ಟೆಬಲ್
2
+ ಹಾಸನ, ಜೂ.1-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್ಸ್ ಸ್ಟೇಬಲ್ ಒಬ್ಬರು ಎಸ್ಪಿ ಕಚೇರಿ ಎದುರೇ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.ಮೂಲತಃ ಹಾಸನ ಹೊರವಲಯದ ಚನ್ನಪಟ್ಟಣದ ನಿವಾಸಿ ಮಮತಾ(38) ಕೊಲೆಯಾದ ಮಹಿಳೆ. ಕೆ.ಆರ್.ಪುರಂನ ಲೋಕನಾಥ್ನನ್ನು 17 ವರ್ಷದ ಹಿಂದೆ ಮಮತಾ ಪ್ರೀತಿಸಿ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ.
3
+ ಹಲವು ತಿಂಗಳುಗಳಿಂದ ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತಿತ್ತು. ಇದರಿಂದ ಮನನೊಂದಿದ್ದ ಪತ್ನಿ ಮಮತಾ ಪತಿ ಲೋಕನಾಥ್ ವಿರುದ್ಧ ಎಸ್ಪಿಗೆ ದೂರು ನೀಡಲು ಇಂದು ಬೆಳಗ್ಗೆ ಕಚೇರಿ ಬಳಿ ಹೋಗಿದ್ದರು.ಪತ್ನಿ ಎಸ್ಪಿ ಕಚೇರಿ ಬಳಿ ಬಂದಿದ್ದಾಳೆಂದು ಕೋಪಗೊಂಡ ಲೋಕನಾಥ್, ಕಚೇರಿ ಎದುರೇ ಪತ್ನಿಗೆ ಚಾಕುವಿನಿಂದ ಎದೆಗೆ ಇರಿದು ಪರಾರಿಯಾಗಿದ್ದನು.
4
+ ರಕ್ತದ ಮಡುವಿನಲ್ಲೇ ಎಸ್ಪಿ ಕಚೇರಿಗೆ ಒಳಗೆ ಹೋದ ಮಮತಾ ಕುಸಿದು ಬಿದ್ದಿದ್ದಾರೆ. ತಕ್ಷಣ ಕಚೇರಿಯಲ್ಲಿದ್ದ ಸಿಬ್ಬಂದಿ ಮಮತ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತ್ತಾದರೂ ಕೆಲ ಹೊತ್ತಿನಲ್ಲೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಆರೋಪಿ ಪತಿ ಲೋಕನಾಥ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
5
+ ಫೋಷಕರ ಆಕ್ರಂದನ: ಮಗಳ ಸಾವಿಗೆ ಅಳಿಯನೇ ಕಾರಣ. ಆತನಿಗೆ ಕಠಿಣ ಶಿಕ್ಷೆಯಾಗಬೇಕು. ಆಸ್ತಿ, ಸೈಟ್, ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದ ಎಂದು ಮಾವ ಶಾಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
6
+ ಅಳಿಯ ಲೋಕನಾಥ ತಮ ಮಗಳ ಮೇಲೆ ದೈಹಿಕ ಹಲ್ಲೆ ಮಾಡಿದ್ದಾನೆ. ಕಿರುಕುಳ ಕೊಟ್ಟರೂ ಸಹ ಮಗಳು ಸಹಿಸಿಕೊಂಡಿದ್ದಳು. ಇದೀಗ ಅವಳ ಸಾವು ನೋಡುವಂತಾಯಿತು ಎಂದು ಮಮತಾ ತಾಯಿ ಕಣ್ಣೀರು ಹಾಕಿದ್ದಾರೆ.
7
+ ಕೌಟುಂಬಿಕ ಕಲಹ:ಈ ಬಗ್ಗೆ ಎಸ್ಪಿ ಮೊಹಮದ್ ಸುಜಿತಾ ಮಾಧ್ಯಮದೊಂದಿಗೆ ಮಾತನಾಡಿ, ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳವಾಗಿತ್ತು ಎಂದು ಗೊತ್ತಾಗಿದೆ. ಇಂದು ಬೆಳಗ್ಗೆ ಮಮತಾ ಅವರು ದೂರು ನೀಡಲು ಬಂದಿದ್ದಾಗ ಕಚೇರಿ ಎದುರು ಘಟನೆ ನಡೆದು ಹೋಗಿದೆ. ಪತಿ ಲೋಕನಾಥ್ನನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
eesanje/url_46_91_3.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾ ಬಿಜೆಪಿ..?
2
+ ಬೆಂಗಳೂರು,ಜು.1-ಸದ್ಯದಲ್ಲೇ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಹಾಲಿ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರ ಪತ್ನಿ ಅನುಸೂಯ ಅವರನ್ನು ಬಿಜೆಪಿಯಿಂದ ಕರೆತರುವ ಪ್ರಯತ್ನ ಸದ್ದಿಲ್ಲದೆ ನಡೆದಿದೆ.
3
+ ಹಾವೇರಿ ಜಿಲ್ಲೆ ಶಿಗ್ಗಾವಿಗೆ ಮಾಜಿ ಮುಖ್ಯಮಂತ್ರಿ ಸಂಸದ ಬಸವರಾಜ ಬೊಮಾಯಿ ಅವರ ಪುತ್ರ ಭರತ್‌ ಬೊಮಾಯಿ ಹಾಗೂ ಬಳ್ಳಾರಿ ಜಿಲ್ಲೆ ಸೊಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ.
4
+ ಇನ್ನು ಪಕ್ಷದಲ್ಲಿ ಪ್ರಾಥಮಿಕ ಹಂತದಲ್ಲಿ ಮಾತ್ರ ಚರ್ಚೆಯಾಗಿದ್ದು, ಮೂರು ಕ್ಷೇತ್ರಗಳಿಗೆ ಗೆಲ್ಲುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಆಡಳಿತಾರೂಢ ಕಾಂಗ್ರೆಸ್‌‍ಗೆ ಠಕ್ಕರ್‌ ಕೊಡಲು ಬಿಜೆಪಿ ರಣತಂತ್ರ ರೂಪಿಸಿದೆ. ಅಂತಿಮವಾಗಿ ಕೇಂದ್ರ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕೆಂದು ಸೂಚನೆ ನೀಡಲಾಗಿದೆ.
5
+ ಚನ್ನಪಟ್ಟಣಕ್ಕೆ ಅನುಸೂಯ?:ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಭದ್ರಕೋಟೆ ಎಂದು ಹೇಳಲಾಗಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ನಿರೀಕ್ಷೆಗೂ ಮೀರಿದ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
6
+ ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜತೆಗೆ ಒಕ್ಕಲಿಗ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್‌ರವರ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯಾಗಿದೆ.
7
+ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌‍ನಿಂದ ಡಿ.ಕೆ.ಶಿವಕುಮಾರ್‌ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ ಎನ್ನಲಾಗುತ್ತಿದೆ.ಈಗಾಗಲೇ ಬೆಂಗಳೂರು ಗ್ರಾಮಂತರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್‌ ಅವರನ್ನು ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.
8
+ ಒಂದು ವೇಳೆ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕ��ವ ಹಾಗೂ ಕಾಂಗ್ರೆಸ್‌‍ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರ ಪತ್ನಿ ಅನುಸೂಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿವೆ.
9
+ ಅನಸೂಯ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ವೇಳೆ ಅನುಸೂಯಾ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.
10
+ ಈಗಷ್ಟೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟದೊಂದಿಗೆ ಎಚ್‌‍.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಜತೆಗೆ ಚನ್ನಪಟ್ಟಣದಲ್ಲಿ ರಾಜಿನಾಮೆಯಿಂದ ತೆರವಾಗಿರುವ ಶಾಸಕ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್‌‍ ಗೆಲುವು ಕಾಣಲೇಬೇಕು. ಕ್ಷೇತ್ರದಲ್ಲಿ ಜೆಡಿಎಸ್‌‍ ಉಳಿಸಿಕೊಳ್ಳುವುದು ಎಚ್‌ಡಿಕೆಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
11
+ ಶ್ರೀರಾಮುಲು, ಭರತ್‌ ಬೊಮಾಯಿಗೆ ಸಿಗಲಿದೆಯೇ ಟಿಕೆಟ್‌?:ಇನ್ನು ಮಾಜಿ ಮುಖ್ಯಮಂತ್ರಿ ಬೊಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ವಿಜೇತರಾಗಿರುವ ಹಿನ್ನಲೆ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಪುತ್ರ ಭರತ್‌ ಬೊಮಾಯಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ.
12
+ ಕುಟುಂಬದವರಿಗೆ ಟಿಕೆಟ್‌ ಕೊಟ್ಟರೆ ಬೊಮಾಯಿ ಅವರೇ ವಿಶೇಷ ಗಮನಹರಿಸಿ ಪುತ್ರನನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತಾರೆ. ಹೀಗಾಗಿ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಒತ್ತಡವೂ ಕೇಳಿಬಂದಿದೆ. ಇದೇ ರೀತಿ ಕಳೆದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಎರಡೂ ಚುನಾವಣೆಗಳಲ್ಲಿ ಸೋತು ರಾಜಕೀಯ ಅತಂತ್ರಕ್ಕೆ ಸಿಲುಕಿರುವ ಬಿ.ಶ್ರೀರಾಮುಲು ಮತ್ತೊಮೆ ಅದೃಷ್ಟ ಪರೀಕ್ಷೆಗಿಳಿಯಲು ಹವಣಿಸುತ್ತಿದ್ದಾರೆ.
13
+ ಬಳ್ಳಾರಿ ಸಂಸದ ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಮುಲು ಟಿಕೆಟ್‌ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ.ಆದರೆ ಎರಡು ಚುನಾವಣೆಗಳಲ್ಲಿ ಸೋತಿರುವ ಶ್ರೀರಾಮುಲ ಬದಲಿಗೆ ತಮ ಆಪ್ತ ಕೆ.ಎಸ್‌‍.ದಿವಾಕರ್‌ ಬಾಬುಗೆ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅಖಾಡಕ್ಕಿಳಿದಿದ್ದಾರೆ.
eesanje/url_46_91_4.txt ADDED
@@ -0,0 +1,7 @@
 
 
 
 
 
 
 
 
1
+ ಕರಾವಳಿ, ಮಲೆನಾಡು ಮುಂದುವರೆದ ಮಳೆ, ಜಲಾಶಯಗಳಿಗೆ ಒಳಹರಿವು ಹೆಚ್ಚಳ
2
+ ಬೆಂಗಳೂರು,ಜು.1-ಕರಾವಳಿ, ಮಲೆನಾಡು, ಕೇರಳದ ವೈನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಸಂಗ್ರಹ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.ಪ್ರಮುಖ ಜಲಾಶಯವಾದ ಕೆಆರ್‌ಎಸ್‌‍ನಲ್ಲಿ ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ.
3
+ ಕೊಡಗು, ಚಿಕ್ಕಮಗಳೂರು ಹಾಗೂ ಕೇರಳದಲ್ಲಿ ಭಾರಿ ಮಳೆಯಾದ ಪರಿಣಾಮ ಕೆಆರ್‌ಎಸ್‌‍, ಕಬಿನಿ ಜಲಾಶಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಒಳಹರಿವು ಹೆಚ್ಚಾಗಿತ್ತು.
4
+ ಮಳೆ ಕಡಿಮೆಯಾದ ಬೆನ್ನಲ್ಲೇ ಒಳಹರಿವಿನ ಪ್ರಮಾಣ ಇಳಿಕೆಯಾಗಿದೆ. ಕೆಆರ್‌ಎಸ್‌‍ ಜಲಾಶಯಕ್ಕೆ 9 ಸಾವಿರ ಕ್ಯೂಸೆಕ್‌್ಸನಷ್ಟು ಒಳಹರಿವು ಇಂದು ಇತ್ತು. ಮತ್ತೆ ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಹೆಚ್ಚಳವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ, ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಹೀಗಾಗಿ ಇನ್ನಷ್ಟು ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ.
5
+ ಗರಿಷ್ಠ 49.452 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಕೆಆರ್‌ಎಸ್‌‍ ಜಲಾಶಯದಲ್ಲಿ ಪ್ರಸ್ತುತ 19.487 ಟಿಎಂಸಿ ನೀರಿದೆ. ನಿನ್ನೆ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌್ಸನಷ್ಟು ಒಳಹರಿವು ಇತ್ತು. ಜಲಾಶಯದಿಂದ 500 ಕ್ಕೂ ಹೆಚ್ಚು ಕ್ಯೂಸೆಕ್ಸ್ ನಷ್ಟು ನೀರನ್ನು ಹೊರಬಿಡಲಾಗುತ್ತಿದೆ.
6
+ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಹಾಗೂ ಅರಬ್ಬಿಸಮುದ್ರದದಲ್ಲಿ ಟ್ರಪ್‌ ನಿರ್ಮಾಣವಾಗಿದೆ. ಇದು ಕೇರಳದ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ವ್ಯಾಪಕವಾಗಿ ಹರಡಿಕೊಂಡಿರುವುದರಿಂದ ಕೇರಳ, ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಎಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.
7
+ ದಕ್ಷಿಣ ಹಾಗೂ ಉತ್ತರ ಒಳನಾಡನಲ್ಲ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಂಭವವಿದೆ. ತಂಪಾದ ಮೇಲೈ ಗಾಳಿ ಆಗಾಗ್ಗೆ ಬೀಸುವುದರಿಂದ ಚಳಿಯ ವಾತಾವರಣ ಹೆಚ್ಚಾಗಲಿದೆ.
eesanje/url_46_91_5.txt ADDED
@@ -0,0 +1,6 @@
 
 
 
 
 
 
 
1
+ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಜನ ಪಕ್ಷಪಾತದ ಆರೋಪ ಮಾಡಿದ ಬಿಜೆಪಿ
2
+ ಬೆಂಗಳೂರು,ಜೂ.30-ಅಬಕಾರಿ ಇಲಾಖೆಯಲ್ಲಿ ಬೆಂಗಳೂರು ವ್ಯಾಪ್ತಿಯ ಎಂಟು ಉಪ ಆಯಕ್ತರ ಪೈಕಿ ನಾಲ್ವರನ್ನು ತಮದೇ ಜಾತಿಯ ಅಧಿಕಾರಿಗಳನ್ನು ನೇಮಕ ಮಾಡಿಕೊಂಡಿರುವುದನ್ನು ರಾಜ್ಯ ಬಿಜೆಪಿ ವಿರೋಧಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಸ್ವಜನ ಪಕ್ಷಪಾತದ ಗಂಭೀರ ಆರೋಪ ಮಾಡಿದೆ.
3
+ ಅಬಕಾರಿ ಇಲಾಖೆಯಲ್ಲಿ ಜಾತಿ ತಾರತಮ್ಯ ಮಾಡಲಾಗಿದೆ. ಒಂದೇ ಸಮುದಾಯದ ನಾಲ್ವರಿಗೆ ಸ್ಥಾನಮಾನ ನೀಡಲಾಗಿದೆ. ವರ್ಗಾವಣೆ ಹಾಗೂ ನೇಮಕಾತಿಯಲ್ಲಿ ಕೆಲ ಸಚಿವರ ಆಪ್ತರಿಗೆ ಮಣೆ ಹಾಕಲಾಗಿದೆ ಎಂದು ದೂರಿದೆ.
4
+ ಈ ಹಿಂದೆಯೂ ರಾಜ್ಯ ಸರ್ಕಾರದ ವಿರುದ್ಧ ಸ್ವಜನಪಕ್ಷಪಾತ ಆರೋಪ ಕೇಳಿಬಂದಿತ್ತು. ಇದೀಗ ಮತ್ತೆ ಸ್ವಜನ ಪಕ್ಷಪಾತ ಆರೋಪ ಕೇಳಿ ಬಂದಿದ್ದು, ಈ ವಿಚಾರವಾಗಿ ರಾಜ್ಯಪಾಲರಿಗೆ ಪತ್ರ ಬರೆಯುವುದಾಗಿ ತಿಳಿಸಿದೆ.
5
+ ಅಬಕಾರಿ ಇಲಾಖೆ ಒಂದೇ ಅಲ್ಲ ಇನ್ನಿತರ ಇಲಾಖೆಯಲ್ಲೂ ಸ್ವಜನಪಕ್ಷಪಾತ ನಡೆಯುತ್ತಿದೆ. ಕಾಂಗ್ರೆಸ್‌‍ ಅಂದರೆ ಸ್ವಜನ ಪಕ್ಷಪಾತ. ಗಾಂಧಿ ಕುಟುಂಬವೇ ಇದಕ್ಕೆ ಉದಾಹರಣೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಸಚಿವರು ವರ್ಗಾವಣೆ ದಂಧೆ ಮಾಡುತ್ತಿದ್ದಾರೆ. ಎಲ್ಲ ಇಲಾಖೆಗಳಲ್ಲೂ ವರ್ಗಾವಣೆ ದಂಧೆ ಜೋರಾಗಿದೆ. ಹೀಗಾಗಿ ಸಚಿವರು ತಮ ಸಮುದಾಯದವರಿಗೆ ಸ್ಧಾನಮಾನ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
6
+ ಇತ್ತಿಚೆಗೆ ಇಲಾಖೆಗಳಲ್ಲಿ ಸಿಂಡಿಕೇಟ್‌ಗಳೇ ಇಲಾಖೆಯ ವರ್ಗಾವಣೆಯನ್ನು ನಿರ್ಧಾರ ಮಾಡುತ್ತಾರೆ. ಇದೇ ಸಿಂಡಿಕೇಟ್‌ಗಳೇ ಸಚಿವರ ಮೇಲೂ ಪ್ರಭಾವ ಬೀರುತ್ತಾರೆ. ಸಚಿವರು ವರ್ಗಾವಣೆಯನ್ನು ಹೋಲ್‌ ಸೇಲ್‌ ವ್ಯಾಪಾರ ಮಾಡಿಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆರೋಪ ಮಾಡಿದ್ದಾರೆ.