1f2d64a33f0d6b057802c97d3e0ea5388190152563f6e99306e0e198baf60385
Browse files- eesanje/url_46_220_8.txt +8 -0
- eesanje/url_46_220_9.txt +7 -0
- eesanje/url_46_221_1.txt +6 -0
- eesanje/url_46_221_10.txt +8 -0
- eesanje/url_46_221_11.txt +6 -0
- eesanje/url_46_221_2.txt +9 -0
- eesanje/url_46_221_3.txt +7 -0
- eesanje/url_46_221_4.txt +9 -0
- eesanje/url_46_221_5.txt +7 -0
- eesanje/url_46_221_6.txt +9 -0
- eesanje/url_46_221_7.txt +6 -0
- eesanje/url_46_221_8.txt +11 -0
- eesanje/url_46_221_9.txt +6 -0
- eesanje/url_46_222_1.txt +5 -0
- eesanje/url_46_222_10.txt +7 -0
- eesanje/url_46_222_11.txt +8 -0
- eesanje/url_46_222_12.txt +6 -0
- eesanje/url_46_222_2.txt +8 -0
- eesanje/url_46_222_3.txt +5 -0
- eesanje/url_46_222_4.txt +8 -0
- eesanje/url_46_222_5.txt +13 -0
- eesanje/url_46_222_6.txt +9 -0
- eesanje/url_46_222_7.txt +6 -0
- eesanje/url_46_222_8.txt +8 -0
- eesanje/url_46_222_9.txt +6 -0
- eesanje/url_46_223_1.txt +6 -0
- eesanje/url_46_223_10.txt +7 -0
- eesanje/url_46_223_11.txt +5 -0
- eesanje/url_46_223_12.txt +7 -0
- eesanje/url_46_223_2.txt +7 -0
- eesanje/url_46_223_3.txt +8 -0
- eesanje/url_46_223_4.txt +7 -0
- eesanje/url_46_223_5.txt +20 -0
- eesanje/url_46_223_6.txt +5 -0
- eesanje/url_46_223_7.txt +5 -0
- eesanje/url_46_223_8.txt +4 -0
- eesanje/url_46_223_9.txt +10 -0
- eesanje/url_46_224_1.txt +5 -0
- eesanje/url_46_224_10.txt +5 -0
- eesanje/url_46_224_11.txt +7 -0
- eesanje/url_46_224_12.txt +7 -0
- eesanje/url_46_224_2.txt +5 -0
- eesanje/url_46_224_3.txt +9 -0
- eesanje/url_46_224_4.txt +7 -0
- eesanje/url_46_224_5.txt +7 -0
- eesanje/url_46_224_6.txt +7 -0
- eesanje/url_46_224_7.txt +9 -0
- eesanje/url_46_224_8.txt +12 -0
- eesanje/url_46_224_9.txt +4 -0
- eesanje/url_46_225_1.txt +12 -0
eesanje/url_46_220_8.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವನಾರು..? ಹೇಗೆ ತಪ್ಪಿಸಿಕೊಂಡ..? : ಸರ್ಕಾರದ ಸುತ್ತ ಹಲವು ಅನುಮಾನಗಳ ಹುತ್ತ
|
2 |
+
ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಬಿಜೆಪಿ ಶರವೇಗದಲ್ಲಿ ರಾಜಕೀಯ ಮಾಡುತ್ತಿದ್ದರೆ, ಕಾಂಗ್ರೆಸ್ ಅನುಸರಿಸುತ್ತಿರುವ ನಿಧಾನಗತಿಯ ಧೋರಣೆಗಳು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ನಿನ್ನೆ ಸಂಜೆ ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ನ ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಕೆಲವು ವ್ಯಕ್ತಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎಂದು ದೂರಲಾಗಿದೆ.
|
3 |
+
ಅದರ ಬೆನ್ನಲ್ಲೇ ಮುಖ್ಯಮಂತ್ರಿಯವರ ಅಧಿಕೃತ ಮೂಲಗಳಿಂದ ಮತ್ತೊಂದು ವಿಡಿಯೋವನ್ನು ಬಹಿರಂಗಗೊಳಿಸಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿಲ್ಲ, ನಾಸಿರ್ ಸಾಬ್ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ ಎಂದು ಸಮರ್ಥಿಸಿಕೊಳ್ಳುವ ಪ್ರಯತ್ನ ನಡೆದಿದೆ. ಆದರೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬಿಜೆಪಿ ಪಾದರಸದಂತೆ ಚುರುಕಾಗಿದ್ದು, ರೇಸ್ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದೆ. ತಡರಾತ್ರಿಯವರೆಗೂ ವಿಧಾನಸೌಧದ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದೆ. ಪೊಲೀಸರಿಗೆ ದೂರು ನೀಡಿದೆ.
|
4 |
+
ಇಂದು ಬೆಳಿಗ್ಗೆ ಶಾಸಕರ ಭವನದಿಂದ ವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ನಾನಾರೀತಿಯ ಚಟುವಟಿಕೆಗಳ ಮೂಲಕ ವಿವಾದಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ ಘಟನೆ ಕುರಿತು ಆರೋಪ ಕೇಳಿ ಬಂದ ತಕ್ಷಣವೇ ನಾಸಿರ್ ಹುಸೇನ್ ಅವರ ಪ್ರತಿಕ್ರಿಯೆ ವಿವಾದಕ್ಕೀಡಾಗುವ ಮೂಲಕ ಆರಂಭದಲ್ಲೇ ಕಾಂಗ್ರೆಸ್ ಪ್ರಕರಣವನ್ನು ನಿಭಾಯಿಸುವಲ್ಲಿ ಎಡವಟ್ಟು ಮಾಡಿಕೊಂಡಿದೆ. ಲೋಕಸಭೆ ಚುನಾವಣೆಯ ಸಂದರ್ಭವಾಗಿರುವುದರಿಂದ ಅತ್ಯಂತ ಸೂಕ್ಷ್ಮವಾಗಿ ಪ್ರಕರಣ ನಿಭಾಯಿಸಬಹುದಾಗಿದ್ದರೂ ಎಲ್ಲಾ ಅವಕಾಶಗಳನ್ನೂ ಕೈಚೆಲ್ಲಿರುವ ಸರ್ಕಾರ ವಿರೋಧಪಕ್ಷಗಳಿಗೆ ಘೋಷಣೆಯ ಅಸ್ತ್ರ ಕೊಟ್ಟಿದೆ.
|
5 |
+
ಶಕ್ತಿ ಕೇಂದ್ರ ವಿಧಾನಸೌಧ ಅತ್ಯಂತ ಸಂಕೀರ್ಣ ಹಾಗೂ ಸೂಕ್ಷ್ಮ ಭದ್ರತಾ ವಲಯ. ವಿಧಾನಸೌಧ ಪ್ರವೇಶಿಸಬೇಕಾದರೆ ನಾನಾ ರೀತಿಯ ತಪಾಸಣೆಗಳಿರುತ್ತವೆ. ಸೂಕ್ತ ದಾಖಲೆ ಪತ್ರಗಳು ಹಾಗೂ ಪರಿಚಯ ಪತ್ರಗಳು ಇಲ್ಲದೇ ಇದ್ದರೆ ವಿಧಾನಸೌಧದ ಒಳಗೆ ಬರಲು ಕಷ್ಟಸಾಧ್ಯ. ಹೀಗಿದ್ದರೂ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದವರು ಯಾರು ಎಂದು ಪತ್ತೆ ಹಚ್ಚಲು 15 ಘಂಟೆ ಕಳೆದರೂ ಸಾಧ್ಯವಾಗದೇ ಇರುವುದು ಅಚ್ಚರಿಗೆ ಕಾರಣವಾಗಿದೆ.
|
6 |
+
ನಿನ್ನೆ ರಾಜ್ಯಸಭಾ ಚುನಾವಣೆಯಾಗಿದ್ದ ರಿಂದಾಗಿ ವಿಧಾನಸೌಧದಲ್ಲಿ ವ್ಯಾಪಕ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಸಿಬ್ಬಂದಿಗಳು ಹೆಜ್ಜೆ ಹೆಜ್ಜೆಗೂ ನಿಗಾ ವಹಿಸಿದ್ದರು. ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದೇ ಆಗಿದ್ದರೆ ತಕ್ಷಣವೇ ಆರೋಪಿಗಳನ್ನು ಪೊಲೀಸರು ಏಕೆ ವಶಕ್ಕೆ ತೆಗೆದುಕೊಳ್ಳಲಿಲ್ಲ ಎಂಬ ಪ್ರಶ್ನೆಗಳು ಕಾಡಲಾರಂಭಿಸಿವೆ. ಘೋಷಣೆ ಕೂಗಿರುವುದರಲ್ಲಿ ಗೊಂದಲ ಇದೆ ಎಂಬ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಸರ್ಕಾರ ಮಾತನಾಡುತ್ತಿದೆ. ಈ ಹಿಂದೆ ಫ್ರೀಡಂ ಪಾರ್ಕ್ನಲ್ಲಿ ಯುವತಿಯೊಬ್ಬರು ಪಾಕಿಸ್ತಾನದ ಪರ ಘೋಷಣೆ ಕೂಗಿದ ಕಾರಣಕ್ಕಾಗಿ ತಕ್ಷಣವೇ ಬಂಧನಕ್ಕೊಳಗಾಗಿದ್ದರು. ಅದೇ ರೀತಿ ನಿನ್ನೆ ಪೊಲೀಸರು ಚುರುಕಾಗಿ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂಬ ಪ್ರಶ್ನೆ ಕಾಡಲಾರಂಭಿಸಿವೆ.
|
7 |
+
ಒಂದು ವೇಳೆ ವಿವಾದಾಸ್ಪದ ಘೋಷಣೆ ಕೂಗಿದ ಬಳಿಕ ಆರೋಪಿಯು ತಪ್ಪಿಸಿಕೊಂಡು ಪರಾರಿಯಾದರು ಎಂಬುದೇ ಆಗಿದ್ದರೆ ವಿಧಾನಸೌಧದಿಂದ ಹೊರಹೋಗುವ ಎಲ್ಲಾ ದಿಕ್ಕುಗಳಲ್ಲೂ ಸಿಸಿಟಿವಿ ಕ್ಯಾಮರಾಗಳಿವೆ. ಶಂಕಿತರು ವಾಹನದಲ್ಲಿ ಬಂದಿದ್ದರೇ? ನಡೆದುಕೊಂಡು ಬಂದಿದ್ದರೇ? ಎಂಬೆಲ್ಲಾ ಮಾಹಿತಿಗಳನ್ನು ಕ್ಷಣಾರ್ಧದಲ್ಲಿ ಪಡೆಯಲು ಅವಕಾಶಗಳಿವೆ. ಹಾಗಿದ್ದರೂ ನಿನ್ನೆ ಸಂಜೆಯಿಂದ ಇಂದು ಬೆಳಗಿನವರೆಗೂ ಪೊಲೀಸರು ವಿಳಂಬ ಮಾಡಿದ್ದೇಕೆ ಎಂಬ ಪ್ರಶ್ನೆಗಳು ಮೂಡಿವೆ.
|
8 |
+
ರಾಜಕೀಯವಾಗಿಯಷ್ಟೇ ಅಲ್ಲದೆ ಸಾಮಾಜಿಕವಾಗಿಯೂ ವಿವಾದಿತ ಘೋಷಣೆ ಅಪಾಯಕಾರಿ ಪರಿಣಾಮ ಬೀರುತ್ತದೆ. ಇಂತಹ ಸೂಕ್ಷ್ಮತೆಯ ಅರಿವಿದ್ದರೂ ಕೂಡ ಆಡಳಿತ ಯಂತ್ರ ಎಡವಿದ್ದೇಕೆ? ಇದರ ಹಿಂದೆ ರಾಜಕೀಯ ಒತ್ತಡಗಳಿವೆಯೇ ಎಂಬ ಅನುಮಾನಗಳು ಮೂಡಿಬರುತ್ತಿವೆ.
|
eesanje/url_46_220_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
|
2 |
+
ಬೆಂಗಳೂರು, ಫೆ.28- ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗಿರುವ ದೇಶದ್ರೋಹಿಯನ್ನು ಬಂಧಿಸದೆ ಕಾಲಹರಣ ಮಾಡಿರುವ ಸರ್ಕಾರದ ಧೋರಣೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ತುಮಕೂರಿನಲ್ಲಿಂದು ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಸಂದರ್ಭದಲ್ಲಿ ನಡೆದ ತಳ್ಳಾಟ-ನೂಕಾಟದಲ್ಲಿ ಪೊಲೀಸರು ಕೂಡ ಗಾಯಗೊಂಡಿದ್ದಾರೆ.
|
3 |
+
ಸರ್ಕಾರ ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿಗೆ ತೆರಳುವ ಮುನ್ನವೇ ಪೊಲೀಸರು ಅವರನ್ನು ತಡೆಯಲು ಮುಂದಾದಾಗ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಮೈಸೂರಿನಲ್ಲಿ ಪ್ರತಿಭಟನೆಗೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಧೋರಣೆ ಖಂಡಿಸಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
|
4 |
+
ರಾಜ್ಯಸಭಾ ಚುನಾವಣೆ : ಮತದಾನ ಮಾಡದಿರುವುದಕ್ಕೆ ಸ್ಪಷ್ಟನೆ ನೀಡಿದ ಹೆಬ್ಬಾರ್
|
5 |
+
ಹಾಸನದಲ್ಲಿ ರಸ್ತೆಗಿಳಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿ ನಂತರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇದೇ ರೀತಿ ಚಿಕ್ಕಮಗಳೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಜೆಡಿಎಸ್ ಕಾರ್ಯಕರ್ತರು ಕೂಡ ಸಾಥ್ ನೀಡಿದ್ದಾರೆ.
|
6 |
+
ಗುಜರಾತ್ನ ಕರಾವಳಿಯಲ್ಲಿ ಬರೋಬ್ಬರಿ 3,300 ಕೆಜಿ ಡ್ರಗ್ಸ್ ವಶ
|
7 |
+
ಸರ್ಕಾರದ ವಿರುದ್ಧ ಕ್ಕಾರದ ಘೋಷಣೆ ಕೂಗಿ ದೇಶದ್ರೋಹಿಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು. ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಇದೇ ರೀತಿ ಉತ್ತರ ಕರ್ನಾಟಕ ಭಾಗದಲ್ಲೂ ಪ್ರತಿಭಟನೆ ಕಾವು ಹೆಚ್ಚಾಗಿದೆ. ಪೊಲೀಸರು ಕಾಂಗ್ರೆಸ್ ಕಚೇರಿ ಹಾಗೂ ಶಾಸಕರ ಮನೆಗಳಿಗೆ ಬಿಗಿಭದ್ರತೆ ನೀಡಿದ್ದಾರೆ.
|
eesanje/url_46_221_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಾಗಿ ಪೊಲೀಸರ ಹುಡುಕಾಟ
|
2 |
+
ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಪರಾರಿಯಾಗಿರುವ ಆರೋಪಿಗಾಗಿ ನಗರ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿಯ ಬಂಧನಕ್ಕೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆ ತಂಡಗಳು ಈಗಾಲೇ ಕಾರ್ಯಾಚರಣೆ ಆರಂಭಿಸಿವೆ. ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಲಾಗಿದೆಯೆಂಬ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸಿದ್ದು, ಹೆಚ್ಚಿನ ತನಿಖೆಗಾಗಿ ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
|
3 |
+
ಆ ವರದಿ ಬಂದ ನಂತರ ಯಾರು ಆ ಘೋಷಣೆಗಳನ್ನು ಕೂಗಿದ್ದಾರೆ ಎಂಬುವುದು ಸ್ಪಷ್ಟವಾಗಿ ತಿಳಿದು ಬರಲಿದೆ.ರಾಜ್ಯಸಭೆ ಚುನಾವಣೆ ಫಲಿತಾಂಶದ ನಂತರ ವಿಧಾನಸೌಧದ ಆವರಣದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಕೈಗೊಳ್ಳಲಾಗಿದೆಯೆಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಅವರು ಈ ಸಂಜೆಗೆ ತಿಳಿಸಿದ್ದಾರೆ.
|
4 |
+
ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್ಕುಮಾರ್ ಒತ್ತಾಯ
|
5 |
+
ಘಟನೆ ನಡೆಯುತ್ತಿದ್ದಂತೆ ವಿಧಾನಸೌಧದ ಪೊಲೀಸ್ ಠಾಣೆಗೆ ತೆರಳಿದ ಡಿಸಿಪಿ ಶೇಖರ್ ಅವರುತಡರಾತ್ರಿಯವರೆಗೂ ಠಾಣೆಯಲ್ಲೇ ಉಳಿದುಕೊಂಡು ಕಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಜೊತೆಗೆ ಚರ್ಚಿಸಿ ಕೆಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಅವರ ಜೊತೆ ಯಾರ್ಯಾರು ಎಲ್ಲಿಂದ ವಿಧಾನಸೌಧಕ್ಕೆ ಬಂದಿದ್ದರು ಎಂಬುವುದರ ಬಗ್ಗೆ ತನಿಖಾ ತಂಡವೊಂದು ಮಾಹಿತಿ ಸಂಗ್ರಹಿಸುತ್ತಿದೆ.
|
6 |
+
ಮತ್ತೊಂದು ತಂಡವು ತಂತ್ರಜ್ಞಾನ ವಿಶ್ಲೇಷಣೆ ಹಾಗೂ ವಿಡಿಯೋಗಳ ಪರಿಶೀಲನೆಗಳ ಕಾರ್ಯದಲ್ಲಿ ತೊಡಗಿದೆ.ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ವಿಧಾನಸೌಧ ಆವರಣದಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ರವಿಕುಮಾರ್ ಸಹ ಠಾಣೆಗೆ ದೂರು ನೀಡಿದ್ದಾರೆ.
|
eesanje/url_46_221_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್
|
2 |
+
ಬೆಂಗಳೂರು,ಫೆ.28- ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ ಪ್ರಕರಣ ಸಂಬಂಧ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
|
3 |
+
ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ. ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿಇನ್ಸ್ಪೆಪೆಕ್ಟರ್ ಖಾಸಗಿ ದೂರು ದಾಖಲಿಸಿರುವುದು ಮತ್ತು ಆ ದೂರು ಪರಿಗಣಿಸಿ ಅರ್ಜಿದಾರರ ವಿರುದ್ಧ ಮ್ಯಾಜಿಸ್ಪ್ರೇಟ್ ನ್ಯಾಯಾಲಯ ಕ್ರಮ ಜರುಗಿಸಿರುವುದು ಕಾನೂನುಬಾಹಿರ ಎಂಬ ವಾದ ಪುರಸ್ಕರಿಸಿ ನ್ಯಾಯಾಲಯ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದುಗೊಳಿಸಿದೆ.
|
4 |
+
ರಾಜ್ಯಸಭೆ ಚುನಾವಣೆ: ಎನ್ಡಿಎ ಮೈತ್ರಿಗೆ ಸೋಲು, ಕಾಂಗ್ರೆಸ್- ಬಿಜೆಪಿಯ ಅಭ್ಯರ್ಥಿಗಳಿಗೆ ಗೆಲುವು
|
5 |
+
ಅಲ್ಲದೇ, ರಾಜಶೇಖರಾನಂದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ಈ ಸಂಬಂಧ ನೀಡಿರುವ ತೀರ್ಪನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸೂಲಿಬೆಲೆ ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರೆ ಭಾಗದಲ್ಲಿ ಪ್ರತಿಭಟನೆ ನಡೆಸಬಾರದು ಎಂದು ಆದೇಶ ಹೊರಡಿಸಿದೆ.
|
6 |
+
ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ಬೆಂಗಳೂರಿನ ಟೌನ್ಹಾಲ್ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿದ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್ ಜೆ ಪಾರ್ಕ್ ಠಾಣೆಯ ಇನ್ಸ್ಪೆಪೆಕ್ಟರ್ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿದಾರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ ಎಂದರು.
|
7 |
+
ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಸಂತನ್ ಸಾವು
|
8 |
+
ನಿಯಮದ ಪ್ರಕಾರ ಇನ್ಸ್ಪೆಕ್ಟರ್ ಗೆ ದೂರು ದಾಖಲಿಸುವ ಅಧಿಕಾರವಿಲ್ಲ. ಹೀಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು.
|
eesanje/url_46_221_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯಸಭೆ ಚುನಾವಣೆ: ಎನ್ಡಿಎ ಮೈತ್ರಿಗೆ ಸೋಲು, ಕಾಂಗ್ರೆಸ್- ಬಿಜೆಪಿಯ ಅಭ್ಯರ್ಥಿಗಳಿಗೆ ಗೆಲುವು
|
2 |
+
ಬೆಂಗಳೂರು,ಫೆ.27- ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ನಾಲ್ಕು ಸದಸ್ಯ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಆಡಳಿತಾರೂಢ ಕಾಂಗ್ರೆಸ್ ನ ಮೂರೂ ಹಾಗೂ ಬಿಜೆಪಿಯ ಒಬ್ಬ ಅಭ್ಯರ್ಥಿ ಆಯ್ಕೆಯಾಗಿದ್ದು ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದಾರೆ. ರಾಜ್ಯಸಭೆ ಚುನಾವಣೆಗೆ ನಡೆದ ಮತ ಎಣಿಕೆ ಪೂರ್ಣಗೊಂಡಿದ್ದು, ರಾಜ್ಯಸಭೆ ಚುನಾವಣೆ ಅಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
|
3 |
+
ಕಾಂಗ್ರೆಸ್ ನ ಅಜಯ್ ಮಕನ್ (47), ಜಿ.ಸಿ.ಚಂದ್ರಶೇಖರ್(45) , ಡಾ. ಸೈಯದ್ ನಾಸಿರ್ ಹುಸೇನ್(47) ಹಾಗೂ ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಭಾಂಡಗೆ(47) ಜಯಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ರಾಜ್ಯಸಭೆಯ ಮಾಜಿ ಸದಸ್ಯ ಡಿ. ಕುಪೇಂದ್ರರೆಡ್ಡಿ(36) ಪರಾಭವಗೊಂಡಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ನಂತರ ಅವರಿಗೆ ಎರಡನೇ ಅಪಜಯವಾಗಿದೆ.
|
4 |
+
ಹುಕ್ಕಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ : 12.5 ಲಕ್ಷ ಮೌಲ್ಯದ ಫ್ಲೇವರ್ ವಶಕ್ಕೆ..
|
5 |
+
ವಿಧಾನಪರಿಷತ್ತಿನ ಬೆಂಗಳೂರು ಶಿಕ್ಶಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ದಿಸಿದ್ದ ಎ. ಪಿ. ರಂಗನಾಥ ರವರ ಸೋಲು ಮೈತ್ರಿಕೂಟದ ಮೊದಲ ಸೋಲಾಗಿತ್ತು. ಜೆಡಿಎಸ್ ಎನ್ ಡಿ ಎ ಕೂಟಕ್ಕೆ ಸೇರಿದ ಈ ಎರೆಡು ಚುನಾವಣೆಯಲ್ಲಿ ಸೋಲುವ ಮೂಲಕ ತೀವ್ರ ಮುಜುಗರಕ್ಕೆ ಒಳಗಾಗಿದೆ. ಆದರೆ ಕಾಂಗ್ರೆಸ್ ನ ಅಭ್ಯರ್ಥಿಗಳು ಎರಡು ಚುನಾವಣೆಯಲ್ಲಿ ಗೆಲ್ಲುವ ಮೂಲಕ ಎನ್ ಡಿ ಎ ವಿರುದ್ಧ ಜಯಗಳಿಸಿದ್ದ ಸಂಭ್ರಮದಲ್ಲಿ ಬೀಗುತ್ತಿದೆ.
|
6 |
+
ಎನ್ ಡಿ ಎ ಮೈತ್ರಿಕೂಟಕ್ಕೆ ಎರಡು ಚುನಾವಣೆಗಳು ಅಗ್ನಿಪರೀಕ್ಷೆಯಾಗಿದ್ದು, ಲೋಕಸಭೆ ಚುನಾವಣೆಗೆ ದಿಕ್ಸೂಚಿಯೆಂದೇ ಬಿಂಬಿಸಲಾಗಿತ್ತು. ಗೆಲ್ಲುವಿನ ಗುರಿ ತಲುಪಲು ಅಗತ್ಯವಿರುವ ಶಾಸಕರ ಸಂಖ್ಯೆ ವಿಧಾನಸಭೆಯಲ್ಲಿ ಇಲದಿದ್ದರು, ಜೆಡಿಎಸ್ ರಾಜ್ಯಸಭೆ ಚುನಾವಣೆಗೆ ಸ್ಫರ್ದೆಮಾಡಿ ಆತ್ಮಸಾಕ್ಷಿ ಮತಗಳನ್ನು ನಿರೀಕ್ಷೆ ಮಾಡಿತ್ತು. ಅದು ಜೆಡಿಎಸ್ ಗೆ ಫಲ ನೀಡಲಿಲ್ಲ. ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರಿಗೆ ಮತದಾನ ನಡೆದಿದ್ದು. 223 ಶಾಸಕರ ಪೈಕಿ 222 ಶಾಸಕರು ಮತ ಚಲಾಯಿಸಿದ್ದು, ಬಿಜೆಪಿಯ ಶಾಸಕ ಶಿವರಾಂ ಹೆಬ್ಬಾರ್ ಮತ ಚಲಾಯಿಸಿಲ್ಲ.
|
eesanje/url_46_221_2.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್ಕುಮಾರ್ ಒತ್ತಾಯ
|
2 |
+
ಬೆಂಗಳೂರು,ಫೆ.28- ರಾಜ್ಯಸಭೆ ಚುನಾವಣಾ ಫಲಿತಾಂಶದ ನಂತರ ನಡೆದ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಶಾಸಕ ಸುನಿಲ್ಕುಮಾರ್ ವಿಧಾನಸಭೆಯಲ್ಲಿ ಒತ್ತಾಯಿಸಿದರು. ನಿನ್ನೆ ಸಂಜೆ ರಾಜ್ಯಸಭಾ ಚುನಾವಣೆ ಫಲಿತಾಂಶ ಬಂದ ನಂತರ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂದು ಅವರು ಆರೋಪಿಸಿದರು.
|
3 |
+
ಈ ಘಟನೆಯ ನೈತಿಕ ಹೊಣೆಯನ್ನು ಮುಖ್ಯಮಂತ್ರಿ ಹೊತ್ತು ಸ್ಪಷ್ಟನೆ ನೀಡಬೇಕು, ಅಲ್ಲಿವರೆಗೂ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಹೇಳಿದರು. ಘೋಷಣೆ ಕೂಗಿದವರು ಪಾಕ್ ಧ್ವಜ ಹಾರಿಸಲು ಹಿಂಜರಿಯುವುದಿಲ್ಲ ಎಂದು ಅವರು ಆರೋಪಿಸಿದರು.
|
4 |
+
ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ಮನಸ್ಥಿತಿಯವರು ವಿಧಾನಸೌಧದ ಒಳಗೆ, ಹೊರಗೆ ಇದ್ದರೆ ಅದನ್ನು ದೊಡ್ಡ ಪ್ರಮಾಣದಲ್ಲಿ ಖಂಡಿಸಬೇಕು. ಸಂತೋಷದ ಸಂಭ್ರಮಾಚರಣೆಗೆ ಆಕ್ಷೇಪಣೆ ಇಲ್ಲ. ಘೋಷಣೆ ಕೂಗಿದ ವ್ಯಕ್ತಿಯ ಬಾಯಿಯನ್ನು ಮತ್ತೊಬ್ಬರು ಮುಚ್ಚುತ್ತಾರೆ. ಆ ರೀತಿ ಘೋಷಣೆ ಕೂಗದಿದ್ದರೆ ಬಾಯಿ ಮುಚ್ಚುವ ಅಗತ್ಯವಿರಲಿಲ್ಲ. ಕಾಂಗ್ರೆಸ್ ಪರವಾಗಿಯೋ ಅಥವಾ ವಿಜೇತ ಅಭ್ಯರ್ಥಿ ಪರವಾಗಿಯೋ ಘೋಷಣೆ ಕೂಗಿದರೆ ಆಕ್ಷೇಪವಿರಲಿಲ್ಲ. ಭಾರತ ವಿರೋಧಿ ಧೋರಣೆಯುಳ್ಳ ನಿತೀಶ್ ಕೌಲ್ ಎಂಬ ವ್ಯಕ್ತಿಯನ್ನು ಕರೆಸಿ ಭಾಷಣ ಮಾಡಿಸಿದ್ದಾರೆ ಎಂದು ಆರೋಪಿಸಿದರು.
|
5 |
+
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?
|
6 |
+
ಆಗ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಆ ರೀತಿಯ ಅವಕಾಶ ಕೊಟ್ಟಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಘೋಷಣೆ ಕೂಗಿದ ಗುಂಪನ್ನು ಹೊರಹೋಗಲು ಬಿಟ್ಟಿದ್ದಾರೆ. ಇದುವರೆಗೂ ಒಬ್ಬರನ್ನೂ ಬಂಧಿಸಿಲ್ಲ. ಇದರ ಹಿಂದಿರುವ ಶಕ್ತಿ ಯಾವುದು ಎಂದು ಪ್ರಶ್ನಿಸಿದರು.
|
7 |
+
ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ತರಾತುರಿಯಲ್ಲಿ ಪಡೆಯಲಾಗುತ್ತಿದೆ. ಆದರೆ ಬೇರೆ ಘಟನೆಯಲ್ಲಿ ತಿಂಗಳಾನುಗಟ್ಟಲೆ ವರದಿ ಬರುವುದಿಲ್ಲ. ಕಳೆದ 9 ತಿಂಗಳಿನಲ್ಲಿ ಸರ್ಕಾರ ನಡೆದುಕೊಂಡ ಧೋರಣೆಯೇ ಇಂತಹ ಘಟನೆ ನಡೆಯಲು ಕಾರಣ ಎಂದು ಟೀಕಿಸಿದರು. ರಾಜ್ಯಪಾಲರ ಭಾಷಣದಲ್ಲಿ ಪತ್ರಿಕೆಗಳು ಬರೆದಿದ್ದ ಒಳ್ಳೆ ಸುದ್ದಿಯನ್ನು ಮುಖ್ಯಮಂತ್ರಿ ಸದನದಲ್ಲಿ ಉಲ್ಲೇಖಿಸಿದರು. ಆದರೆ ಈ ಘಟನೆಗೆ ಸಂಬಂಧಿಸಿದಂತೆ ವರದಿ ಮಾಡಿದವರನ್ನು ಬೆದರಿಸುವುದು ಎಷ್ಟು ಸರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಯವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ವಿಚಾರವನ್ನು ವಾಚಿಸಿದರು.
|
8 |
+
ರಣರಂಗವಾದ ಪರಿಷತ್ : ಏಕವಚನದಲ್ಲೇ ವಾಗ್ದಾಳಿ
|
9 |
+
ಕೈ ಮುಗಿದು ಒಳಗೆ ಬಾ, ಧೈರ್ಯವಾಗಿ ಪ್ರಶ್ನಿಸಿ ಎಂದು ಹೇಳುವ ಸರ್ಕಾರ ವಾಸ್ತವ ವಿಚಾರವನ್ನು ಬೆಳಕಿಗೆ ತರು�� ಪತ್ರಕರ್ತರನ್ನು ಗದರಿಸುತ್ತದೆ. ಜಿನ್ನಾ ಮಾನಸಿಕ ಸರ್ಕಾರ ಇರುವುದರಿಂದ ಇಂತಹ ಘಟನೆ ನಡೆಯುತ್ತಿರುವುದರ ಹೊಣೆ ಸರ್ಕಾರವೇ ಹೆರಬೇಕು ಎಂದು ಒತ್ತಾಯಿಸಿದರು. ಶಾಸಕರ ಭವನದಿಂದ ವಿಧಾನಸೌಧಕ್ಕೆ ರಾಷ್ಟ್ರಧ್ವಜ ಹಿಡಿದು ನಾವು ಬಂದಿದ್ದೇವೆ. ಆದರೆ 2022 ರ ಫೆ.18 ರಂದು ಹಿಜಾಬ್ ಘಟನೆ ಚರ್ಚೆ ಮಾಡುವಾಗ ಕಾಂಗ್ರೆಸ್ ಶಾಸಕರು ಸದನದಲ್ಲಿ ರಾಷ್ಟ್ರಧ್ವಜ ಪ್ರದರ್ಶನ ಮಾಡಿದ್ದರು ಎಂದು ಹೇಳಿದ್ದರು.
|
eesanje/url_46_221_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಮಾ.1ರಿಂದ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ, ತಪ್ಪಿದರೆ ದಂಡ ಫಿಕ್ಸ್
|
2 |
+
ಬೆಂಗಳೂರು,ಫೆ.27- ಮುಂದಿನ ತಿಂಗಳ ಆರಂಭದ ನಂತರ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರದಿದ್ದರೆ ಅಂತಹ ಮಳಿಗೆಗಳ ವ್ಯಾಪಾರ ಪರವಾನಿಗಿ ರದ್ದಾಗುವುದರ ಜೊತೆಗೆ ಭಾರಿ ಪ್ರಮಾಣದ ದಂಡ ಪಾವತಿಸಬೇಕಾಗುತ್ತದೆ. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿ ಇದೆ. ಆದರೂ ಇನ್ನು ನೂರಾರು ಮಂದಿ ಕನ್ನಡ ಅನುಷ್ಠಾನಕ್ಕೆ ಮೀನಾಮೇಷ ಎಣಿಸುತ್ತಿದ್ದಾರೆ.
|
3 |
+
ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಅಧಿಕಾರಿಗಳು ಕನ್ನಡ ಭಾಷಾ ಫಲಕ ಅಳವಡಿಕೆ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಬೆಳಗಿನ ಜಾವ ಕಸ ಸಂಗ್ರಹಿಸಲು ಮನೆ ಬಾಗಿಲಿಗೆ ಬರುವ ಕಸದ ಗಾಡಿಗಳ ಮೂಲಕ ಕನ್ನಡ ನಾಮಫಲಕ ಬಳಕೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಪ್ರದರ್ಶನದ ಅನುಷ್ಠಾನ ಪ್ರಾಧಿಕಾರವಾಗಿರುವ ಬಿಬಿಎಂಪಿಯ ಆರೋಗ್ಯ ವಿಭಾಗದವರು ಇದುವರೆಗೂ 50,000 ಕ್ಕೂ ಹೆಚ್ಚು ವ್ಯಾಪಾರಿಗಳು ಮತ್ತು ಅಂಗಡಿಗಳಿಗೆ ನೋಟಿಸ್ ಕಳುಹಿಸಿದ್ದಾರೆ.
|
4 |
+
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?
|
5 |
+
ಆರೋಗ್ಯ ನಿರೀಕ್ಷಕರು, ಮಾರ್ಷಲ್ಗಳನ್ನು ನಿಯೋಜಿಸಿ ಮತ್ತು ನಿರಂತರ ತಪಾಸಣೆಯ ಮೂಲಕ ಇದುವರೆಗೂ 40 ಸಾವಿರಕ್ಕೂ ಹೆಚ್ಚು ಅಂಗಡಿ ಮತ್ತು ಸಂಸ್ಥೆಗಳಲ್ಲಿ ಕನ್ನಡ ಭಾಷಾ ಫಲಕ ಜಾರಿಗೊಳಿಸಲಾಗಿದೆ ಉಳಿದವರು ನಾಳೆಯೊಳಗೆ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಕೆ ಮಾಡುವಂತೆ ಅರಿವು ಮೂಡಿಸಲಾಗುತ್ತಿದೆ. ನಗರದಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರಿಗಳು ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿ ಹೊರಡಿಸಿದ ಆದೇಶವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಲಯ ಮಟ್ಟದ ಅಧಿಕಾರಿಗಳಿಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
|
6 |
+
ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ
|
7 |
+
ಆದೇಶ ಪಾಲಿಸದ ಅಧಿಕಾರಿಗಳಿಗೂ ಬಿಸಿ ಮುಟ್ಟಿಸಲಾಗಿದ್ದು, ನಿಯಮಗಳನ್ನು ಪಾಲಿಸಿದ ಕೆಆರ್ ಪುರಂನ ಹಿರಿಯ ಆರೋಗ್ಯ ನಿರೀಕ್ಷಕರನ್ನು ಬಿಬಿಎಂಪಿ ಅಮಾನತುಗೊಳಿಸಲಾಗಿದೆ. ಒಟ್ಟಾರೆ, ಮಾರ್ಚ್ ಒಂದರ ನಂತರ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಕೆ ಇರಬೇಕು ಇಲ್ಲದಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
|
eesanje/url_46_221_4.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಣರಂಗವಾದ ಪರಿಷತ್ : ಏಕವಚನದಲ್ಲೇ ವಾಗ್ದಾಳಿ
|
2 |
+
ಬೆಂಗಳೂರು,ಫೆ.28- ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾನೆ. ಅವನ ಬಾಯಿ ಮುಚ್ಚಿಸಿ ಎಂದು ಅಬ್ದುಲ್ ಜಬ್ಬರ್ ಬಿಜೆಪಿಯ ಎನ್.ರವಿಕುಮಾರ್ ಕುರಿತು ಬಳಸಿದ ಏಕವಚನ ಪದ ಪ್ರಯೋಗದಿಂದ ವಿಧಾನಪರಿಷತ್ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿತು. ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು, ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಮಾತನಾಡಲು ಅವಕಾಶ ನೀಡಿದ್ದರು.
|
3 |
+
ಮಾತನಾಡುವ ವೇಳೆ ರವಿಕುಮಾರ್, ಇದು ದೇಶದ್ರೋಹಿ ಸರ್ಕಾರ. ಅಧಿಕಾರದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ. ಇಂಥ ನಿಷ್ಕ್ರಿಯ ಸರ್ಕಾರ ಇದ್ದರೂ ಒಂದೇ ಇಲ್ಲದಿದ್ದರೂ ಒಂದೇ ಆದ್ದರಿಂದ ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು. ಆಗ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯುತ್ತಿತ್ತು. ಇದರ ನಡುವೆ ಅಬ್ದುಲ್ ಜಬ್ಬರ್ ಎದ್ದು ನಿಂತು, ಇವನು ಮಾತೇತ್ತಿದ್ದರೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಾನೆ. ಮೊದಲು ಇವನ ಬಾಯಿ ಬಂದ್ ಮಾಡಿ ಎಂದಿದ್ದು, ವಿವಾದಕ್ಕೆ ಬೆಂಕಿಗೆ ತುಪ್ಪ ಸುರಿದಂತೆ ಮಾಡಿತು.
|
4 |
+
ಏಕವಚನದಲ್ಲಿ ಮಾತನಾಡಿದರೆ ಸರಿ ಇರುವುದಿಲ್ಲ. ಗೌರವ ಕೊಟ್ಟು , ಗೌರವ ತೆಗೆದುಕೊಳ್ಳಿ. ಇಲ್ಲದಿದ್ದರೆ ನೆಟ್ಟಗಿರುವುದಿಲ್ಲ ಎಂದು ರವಿಕುಮಾರ್ ಏರಿದ ಧ್ವನಿಯಲ್ಲಿ ಅಬ್ಬರಿಸುತ್ತಾ ಪ್ರತಿಪಕ್ಷಗಳ ಸದಸ್ಯರತ್ತ ಮುನ್ನುಗ್ಗಿದರು. ಇದಕ್ಕೆ ಸಾಥ್ ನೀಡಿದ ತುಳಸಿ ಮುನಿರಾಜು ಗೌಡ, ತಾಕತ್ತಿದ್ದರೆ ಬಾ ಎನ್ನುತ್ತಲೇ ಅಬ್ದುಲ್ ಜಬ್ಬರ್ ವಿರುದ್ದ ಮುಗಿಬಿದ್ದರು. ಆಗ ಬಿಜೆಪಿಯ ಶಾಸಕರು ಸದನದ ಬಾವಿಗೆ ನುಗ್ಗಿ ಏಕವಚನದಲ್ಲಿ ಮಾತನಾಡಿರುವ ಜಬ್ಬರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
|
5 |
+
ಒಂದು ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ನಿರ್ಮಾಣವಾಯಿತು. ಸಭಾಪತಿ ಪೀಠದ ಎದುರೇ ಬಿಜೆಪಿ ಸದಸ್ಯರು ಜಬ್ಬರ್ ವರ್ತನೆಗೆ ಕೆಂಡಕಾರಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಸಭಾನಾಯಕ ಭೋಸ್ರಾಜ್, ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಮತ್ತಿತರರು ಪರಿಸ್ಥಿತಿಯನ್ನು ನಿಭಾಯಿಸಲು ಹರಸಾಹಸಪಟ್ಟರು.
|
6 |
+
ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್ನಲ್ಲೂ ಕೋಲಾಹಲ
|
7 |
+
ಜಬ್ಬಾರ್ ವಿರುದ್ಧ ಇಡೀ ಬಿಜೆಪಿ ಸದಸ್ಯರು ಮುಗಿಬಿದ್ದರು. ಆಗ ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ಸಭಾಪತಿಗಳು, ಸದನವನ್ನು ಕೆಲಕಾಲ ಮುಂದೂಡಿದರು. ಇದಕ್ಕೂ ಮುನ್ನ ಮಾತನಾಡಿದ ರವಿಕುಮಾರ್, ಇದು ದೇಶದ್ರೋಹಿ ಸರ್ಕಾರ. ಪ್ರಕರಣ ನಡೆದು ಹಲವು ಗಂಟೆಗಳಾಗಿದ್ದರೂ ಯಾರನ್ನೂ ಬಂಧಿಸಿಲ್ಲ. ಕೇವಲ ನೆಪ ಮಾತ್ರಕ್ಕೆ ದೂರು ದಾಖಲಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.
|
8 |
+
ಮಾಧ್ಯಮಗಳು ಸರ್ಕಾರವನ್ನು ನೇಣಿಗೆ ಹಾಕಲು ಮುಂದಾಗಿವೆ : ಪ್ರಿಯಾಂಕ್ ಖರ್ಗೆ
|
9 |
+
ದೇಶದ್ರೋಹಿ ಸರ್ಕಾರ ಎಂದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಹರಿಪ್ರಸಾದ್ ಕ್ರಿಯಾಲೋಪ ಎತ್ತಿದರು. ಸದಸ್ಯ ರವಿಕುಮಾರ್ ನಮ್ಮ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಿಮ್ಮ ಪ್ರಧಾನಿ ನರೇಂದ್ರಮೋದಿಗೆ ತಾಕತ್ತಿದ್ದರೆ ನಮ್ಮ ಸರ್ಕಾರದ ವಿರುದ್ಧ ದೂರು ದಾಖಲಿಸಲು ಹೇಳಿ ಇಲ್ಲದಿದ್ದರೆ ಸದಸ್ಯರ ಮೇಲೆ ದೂರು ದಾಖಲಿಸಬೇಕಾಗುತ್ತದೆ ಎಂದು ಆಗ್ರಹಿಸಿದರು. ಆಗ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಭಾರೀ ಗದ್ದಲ ಉಂಟಾಯಿತು. ಒಂದು ಹಂತದಲ್ಲಿ ತಾಳ್ಮೆ ಕಳೆದುಕೊಂಡ ಸಭಾಪತಿ ಹೊರಟ್ಟಿ ಅವರು ನೀವು ಇದೇ ರೀತಿ ವರ್ತಿಸಿದರೆ ಸದನವನ್ನು ನಾನು ಮುಂದೂಡುತ್ತೇನೆ ಎಂದು ಎಚ್ಚರಿಕೆ ಕೊಟ್ಟರು.
|
eesanje/url_46_221_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?
|
2 |
+
ಬೆಂಗಳೂರು,ಫೆ.28- ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಎಫ್ಎಸ್ಎಲ್ನವರು ವೈಜ್ಞಾನಿಕ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪೋಸ್ಟಿಂಗ್ ಮಾಡಿದ್ದಾರೆ. ನಾಸೀರ್ ಸಾಬ್ ಜಿಂದಾಬಾದ್ ಎಂದು ಹೇಳಲಾಗಿದೆ ಅಂತ ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ರು ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದರು.
|
3 |
+
ಈಗಾಗಲೇ ಎಫ್ಎಸ್ಎಲ್ನವರು ಪರೀಶೀಲನೆ ಕೈಗೊಂಡಿದ್ದಾರೆ. ಎಲ್ಲ ವೀಡಿಯೋ ತುಣುಕುಗಳನ್ನು ಸಂಗ್ರಹಿಸುತ್ತಿದ್ದಾರೆ. ಅಧಿಕೃತವಾಗಿ ಸುದ್ದಿ ವಾಹಿನಿಯಲ್ಲಿ ಮೊದಲು ಪ್ರಸಾರವಾದ ವೀಡಿಯೋಗಳನ್ನು ಎಫ್ಎಸ್ಎಲ್ನವರು ಪಡೆಯಲಿದ್ದಾರೆ. ವೈಜ್ಞಾನಿಕವಾಗಿ ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಬಿಜೆಪಿಯವರು ಕೊಟ್ಟಿರುವ ದೂರನ್ನು ಸುಮೋಟೋ ಜತೆ ಸೇರಿಸಲಾಗುವುದು ಎಂದು ಹೇಳಿದರು.
|
4 |
+
ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿದ ಪಾಕ್ ಪರ ಘೋಷಣೆ
|
5 |
+
ಘಟನೆಗೆ ಸಂಬಂಧಿಸಿದಂತೆ ಕೂಲಂಕುಷವಾಗಿ ಎಲ್ಲವನ್ನು ಪರಿಶೀಲನೆ ನಡೆಸಲಾಗುತ್ತಿವೆ. ಘೋಷಣೆ ಕೂಗಿದರೂ ಎನ್ನಲಾದ ಸ್ಥಳದಲ್ಲಿ ಯಾರಿದ್ದರು ಅನ್ನುವುದನ್ನು ಗುರುತಿಸಿ, ಅವರನ್ನು ವಿಚಾರಣೆ ನಡೆಸಲಾಗುತ್ತೆದೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಏನೆಲ್ಲ ಕಾನೂನು ರೀತ್ಯ ಕ್ರಮ ಜರುಗಿಸಬೇಕೊ ಅದು ಆಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
|
6 |
+
ಯಾರೋ ಒಬ್ಬ ಮಾಡಿದ್ದನೆಂಬುದನ್ನು ಕಾಂಗ್ರೆಸ್ ಪಕ್ಷಕ್ಕೆ ತಳುಕು ಹಾಕುವುದು ಸರಿಯಲ್ಲ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮಾಡಿ, ವರದಿ ಆಧರಿಸಿ ಏನೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಅದು ಆಗುತ್ತದೆ. ಬಿಜೆಪಿ ಪಕ್ಷ ಶೂರವಾದಗಿನಿಂದಲೂ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಎಂದು ಹೇಳುತ್ತಲೇ ಇದ್ದಾರೆ. ಕಾಂಗ್ರೆಸ್ ಪಕ್ಷ ಏನು ತಪ್ಪು ಮಾಡಿದೆ ಎಂದು ಪ್ರಶ್ನಿಸಿದರು.
|
7 |
+
ಆತ್ಮಸಾಕ್ಷಿ ಪರ ಎಸ್.ಟಿ.ಸೋಮಶೇಖರ್ ಮತ :ಬಿಜೆಪಿಯರ ಪ್ರತಿಭಟನೆ ತಪ್ಪು ಅಂತ ಹೇಳುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲಿ. ಸದನದ ಒಳಗೆ ಪ್ರತಿಭಟಿಸುವುದಾದರೆ ಸ್ಪೀಕರ್ ಅನುಮತಿ ಬೇಕಾಗುತ್ತದೆ ಎಂದರು. ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರು ಆತ್ಮಸಾಕ್ಷಿ ಪರ ಮತ ಹಾಕುವುದಾಗಿ ಹೇಳಿದ್ದರು. ಅದರಂತೆ ಮಾತಿನ ಪ್ರಕಾರ ಮತ ಚಲಾಯಿಸಿರಬಹುದು. ಇದಕ್ಕೆ ಬೇರೆ ಅರ್ಥ ಕಲ್ಪಿಸು��ುದು ಬೇಡ ಎಂದು ತಿಳಿಸಿದರು.
|
eesanje/url_46_221_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಫೆ.28- ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ, ಮುಲಾಜಿಲ್ಲದೇ ಮಟ್ಟ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆಯೇ? ಇಲ್ಲವೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ.
|
3 |
+
ಸಂಬಂಧಪಟ್ಟ ವಿಡಿಯೋಗಳನ್ನು ಈಗಾಗಲೇ ಎಫ್ಎಸ್ಎಲ್ಗೆ ಕಳುಹಿಸಿದ್ದೇವೆ. ಘೋಷಣೆ ಕೂಗಿದ್ದೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಈ ರೀತಿಯ ಕೃತ್ಯಗಳಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಅನಿವಾರ್ಯ. ದೇಶದ್ರೋಹಿಗಳನ್ನು ಮಟ್ಟ ಹಾಕಲಾಗುವುದು ಎಂದು ತಿಳಿಸಿದರು.
|
4 |
+
ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್ನಲ್ಲೂ ಕೋಲಾಹಲ
|
5 |
+
ಸಚಿವ ಜಮೀರ್ ಅಹಮ್ಮದ್ ಖಾನ್:ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ನಡೆದಿದ್ದೇ ಆಗಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಆ ರೀತಿಯ ಘಟನೆ ಆಗಿಲ್ಲ ಎಂದು ರಾಜ್ಯಸಭೆಯ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಸ್ಪಷ್ಟನೆ ಕೊಟ್ಟಿದ್ದಾರೆ. ಅದರ ನಂತರವೂ ತನಿಖೆಗಾಗಿ ವಿಡಿಯೋವನ್ನು ಎಫ್ಎಸ್ಎಲ್ಗೆ ಕಳುಹಿಸಿಕೊಡಲಾಗಿದೆ, ತನಿಖೆ ಮುಂದುವರೆದಿದೆ. ಘೋಷಣೆ ಕೂಗಿದ್ದರೆ ತಕ್ಕ ಶಿಕ್ಷೆ ಆಗುವುದು ಅಗತ್ಯ ಎಂದು ಹೇಳಿದರು.
|
6 |
+
ಬಿಜೆಪಿಯವರು ಸೋತು ಸುಣ್ಣವಾಗಿದ್ದಾರೆ. ಮುಖಭಂಗ ಅನುಭವಿಸಿದ್ದಾರೆ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಬೇರೆ ವಿಷಯಗಳಿಲ್ಲ. ನಿನ್ನೆ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಯವರ ರಾಜೀನಾಮೆ ಕೇಳುವುದು ಅಗತ್ಯವಿಲ್ಲ. ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದೇ ಆಗಿದ್ದರೆ ಅಂತವರನ್ನು ದೇಶದ್ರೋಹಿ ಎನ್ನುತ್ತೇನೆ ಎಂದರು.
|
7 |
+
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್
|
8 |
+
ಸಚಿವ ಮಧು ಬಂಗಾರಪ್ಪ :ಬೆಂಗಳೂರು,ಫೆ.28- ಪಾಕಿಸ್ತಾನದ ಪರ ಘೋಷಣೆ ಕೂಗಿದ್ದೇ ನಿಜವಾಗಿದ್ದರೆ ಅಂತವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ ಇದರಲ್ಲಿ ಬೇರೆ ಸ್ವರೂಪವೇ ಇದೆ. ಬಿಜೆಪಿಯವರು ಇಂತಹ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುವ ಕೆಟ್ಟ ಚಾಳಿ ಖಂಡನೀಯ ಎಂದರು.
|
9 |
+
ಪಾಕಿಸ್ತಾನದ ಪರ ಘೋಷಣೆ ಕೂಗಿದ್ದೇ ನಿಜವಾಗಿದ್ದರೆ ಅಂತವರ ವಿರುದ್ಧ ನಾವೆಲ್ಲಾ ಸೇರಿ ಧಿಕ್ಕಾರ ಕೂಗಬೇಕಿದೆ. ಈ ವಿಚಾರವನ್ನು ಸಂಪೂರ್ಣವಾಗಿ ಗೃಹ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆ ನೋಡಿಕೊಳ್ಳುತ್ತದೆ. ತಪ್ಪುಗಳಾಗಿದ್ದರೆ ಸಂಬಂಧಪಟ್ಟವರು ರಾಜೀನಾಮೆ ನೀಡುವುದ ಅಗತ್ಯ ಎಂದರು. ಬಿಜೆಪಿಯವರು ವಾಸ್ತವವನ್ನು ತಿಳಿದುಕೊಳ್ಳುವ ಮೊದಲೇ ಮಾಧ್ಯಮಗಳ ವಿಡಿಯೋ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಖಂಡನೀಯ ಎಂದರು.
|
eesanje/url_46_221_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮಾಧ್ಯಮಗಳು ಸರ್ಕಾರವನ್ನು ನೇಣಿಗೆ ಹಾಕಲು ಮುಂದಾಗಿವೆ : ಪ್ರಿಯಾಂಕ್ ಖರ್ಗೆ
|
2 |
+
ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಮಾಧ್ಯಮಗಳು ಸರ್ಕಾರವನ್ನು ನೇಣಿಗೆ ಹಾಕಲು ಮುಂದಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಬಗ್ಗೆ 11 ಗಂಟೆಗೆ ವರದಿ ಬರಲಿದೆ. ಅದರ ಬಳಿಕ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.
|
3 |
+
ನಿನ್ನೆವರೆಗಿನ ಮಾಹಿತಿ ಪ್ರಕಾರ ಇದೊಂದು ಕಾಲ್ಪನಿಕ ಘಟನೆ. ನಾವು ವಿಡಿಯೋದಲ್ಲಿರುವ ಆಡಿಯೋವನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಯಾವುದೇ ಘೋಷಣೆಗಳು ಪಾಕಿಸ್ತಾನದ ಪರವಾಗಿ ಕೂಗಿರುವುದು ಕಂಡುಬಂದಿಲ್ಲ. ನಾಸಿರ್ ಸಾಬ್, ನಾಸಿರ್ ಹುಸೇನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ, ಪಾಕಿಸ್ತಾನದ ಪರವಾಗಿ ಯಾವುದೇ ಘೋಷಣೆ ಕೂಗಿಲ್ಲ ಎಂದರು. ಆ ರೀತಿ ಘೋಷಣೆ ಕೂಗಿದ್ದರೆ ವೈಯಕ್ತಿಕ. ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ. ಈ ರೀತಿಯ ಘೋಷಣೆಗಳನ್ನು ಕೂಗುವುದು ದೇಶದ್ರೋಹ ಘಟನೆಯಾಗುತ್ತದೆ.
|
4 |
+
ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಸಂತನ್ ಸಾವು
|
5 |
+
ಆಡಿಯೋ ಫೋರಂ ಸಿಟ್ನಲ್ಲಿ ಪ್ರಸಾರವಾಗುತ್ತಿರುವ ವಿಡಿಯೋ, ಆಡಿಯೋ ಮಿಸ್ ಆಗಿರುವುದಾಗಿ ಹೇಳಲಾಗಿತ್ತು. ಆದರೂ ನಾವು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದರು. ಸುಳ್ಳು ಸುದ್ದಿಗಳ ಪ್ರಸಾರ ತಡೆಗೆ ಕಾನೂನು ಕೂಡ ಇದೆ. ಮಾಧ್ಯಮ 4 ನೆ ಅಂಗವಾಗಿದ್ದು ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು ಎಂದರು.
|
6 |
+
ಬಿಜೆಪಿ ಚುನಾವಣೆ ಸೋಲಿನಿಂದ ಹತಾಶರಾಗಿ ಹೋರಾಟಕ್ಕಿಳಿದಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾದ ನಾಸಿರ್ ಹುಸೇನ್ ಅವರು ಮಾಧ್ಯಮದ ಪ್ರತಿನಿಗಳನ್ನು ಏಕವಚನದಲ್ಲಿ ಮಾತನಾಡಿದ್ದು ಸರಿಯಲ್ಲ ಎಂದು ಹೇಳಿದರು.
|
eesanje/url_46_221_8.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್ನಲ್ಲೂ ಕೋಲಾಹಲ
|
2 |
+
ಬೆಂಗಳೂರು,ಫೆ.28- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ವಿಧಾನಪರಿಷತ್ನಲ್ಲಿ ಗದ್ದಲ ಕೋಲಾಹಲ ಸೃಷ್ಟಿಸಿತು. ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ದಿನದ ಕಲಾಪವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವಿಷಯ ಪ್ರಸ್ತಾಪಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ಏರ್ಪಟ್ಟು ಸದನವನ್ನು ಕೆಲ ಮುಂದೂಡಲಾಯಿತು.
|
3 |
+
ವಿಷಯ ಪ್ರಸ್ತಾಪಿಸಿದ ಕೋಟಾ ಶ್ರೀನಿವಾಸ್ ಪೂಜಾರಿ, ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಪರ ವಿಧಾನಸೌಧದ ಆವರಣದಲ್ಲೇ ಘೋಷಣೆ ಕೂಗಿದ್ದಾರೆ. ಇದು ಎಲ್ಲರಿಗೂ ಆತಂಕ ಸೃಷ್ಟಿಸಿದೆ. ಇಂದು ಪಾಕಿಸ್ತಾನ ಜಿಂದಾಬದ್ ಎಂಬುವರು ನಾಳೆ ವಿಧಾನಸೌಧಕ್ಕೆ ಬಾಂಬ್ ಇಡುವುದಿಲ್ಲ ಎಂಬುದಕ್ಕೆ ಖಾತರಿ ಏನು? ಎಂದು ಪ್ರಶ್ನಿಸಿದರು. ಸರ್ಕಾರ ಕೇವಲ ಸುಮೊಟೊ ಪ್ರಕರಣ ದಾಖಲಿಸಿದರೆ ಸಾಲದು. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ತಕ್ಷಣವೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದರು.
|
4 |
+
ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಕೇವಲ ಕಣ್ಣೊರೆಸುವ ತಂತ್ರ ಮಾಡುತ್ತಿದೆ. ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದರೆ ಇದೊಂದು ಬೇಜಾವಬ್ದಾರಿ ಸರ್ಕಾರ. ತಕ್ಷಣವೇ ಸದನಕ್ಕೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಬೇಕೆಂದು ಒತ್ತಾಯಿಸಿದರು.
|
5 |
+
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್
|
6 |
+
ನಾಸಿರ್ ಹುಸೇನ್ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಲು ಮಾಧ್ಯಮದವರನ್ನು ಬೆದರಿಸಿದ್ದಾರೆ. ಹಾಗಾದರೆ ಮಾಧ್ಯಮದವರಿಗೆ ಮುಕ್ತ ಸ್ವತಂತ್ರ ಇಲ್ಲವೇ? ಇದರಲ್ಲಿ ಯಾರು ಕೂಡ ರಾಜಕಾರಣ ಬೆರಸಬಾರದು. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು. ಈ ಸರ್ಕಾರದಂತ ಕೆಟ್ಡ ಸರ್ಕಾರ ಇಲ್ಲ. ಪಾಕಿಸ್ತಾನ ಘೋಷಣೆ ಕೂಗಿದವರ ಪರ ದಾಖಲೆ ಹುಡುಕ್ತಿದ್ದೀರ. ಇಂಥ ಸರ್ಕಾರ ಬೇರೆ ಕಡೆ ಇದ್ದಿದ್ದರೆ ವಜಾ ಆಗುತ್ತಿತ್ತು. ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
|
7 |
+
ಆಗ ಸರ್ಕಾರದ ಪರವಾಗಿ ಕಾನೂನು ಮತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಉತ್ತರಿಸಿ, ನಾನು ಪ್ರಾಮಾಣಿಕವಾಗಿ ಹೇಳುವುದಾದರೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ನನಗೆ ಸ್ಪಷ್ಟವಾಗಿ ಕೇಳಿಲ್ಲ. ಆದರೂ ಇದನ್ನು ಗಂಭೀರವಾಗಿ ಪರಿಗಣಿಸಿಯೇ ದೂರು ದಾಖಲಿಸಿದ್ದೇವೆ. ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ. ಇದರಲ್ಲಿ ರಾಜೀಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
|
8 |
+
ನನಗೆ ಕೇಳಿದ್ದನ್ನು ಹೇಳಿದ್ದೇನೆ.ಇದಾರಚೆಗೆ ಘೋಷಣೆ ಕೇಳಿದ್ದರೆ ದೂರು ನೀಡಿದ್ದೀರಿ ಕಾನೂನಾತ್ಮಕ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್, ಸಚಿವರಿಗೆ ಆರೋಪಿ ಪಾಕ್ ಪರ ಘೋಷಣೆ ಕೂಗಿರುವ ದನಿ ಕೇಳಿಲಿಲ್ಲವೆಂದರೆ ಅವರ ಕಿವಿ ಕಿವುಡಾಗಿರಬೇಕು ಎಂದು ವ್ಯಂಗ್ಯವಾಡಿದರು. ಈ ವೇಳೆ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಸಚಿವರಿಗೆ ಸುಳ್ಳು ಹೇಳಲು ಬರುವುದಿಲ್ಲ. ನಿಮಗೆ ಮಾನಮರ್ಯಾದೆ ಇದ್ದರೆ ಮೊದಲು ಕ್ರಮ ಕೈಗೊಳ್ಳಿ ಎಂದರು.
|
9 |
+
ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್
|
10 |
+
ಸರ್ಕಾರಕ್ಕೆ ನಾಚಿಕೆಅನ್ನೋದೇ ಇಲ್ವಾ? ಸಿಎಂ ಬಂದು ಇಲ್ಲಿ ಉತ್ತರ ಕೊಡಬೇಕು. ಇಡೀ ರಾಜ್ಯಕ್ಕೆ ಕೇಳಿದ ಘೋಷಣೆ ಸರ್ಕಾರಕ್ಕೆ ಕೇಳಿಲಿಲ್ಲವೇ? ಕಾಂಗ್ರೆಸ್ ಧೋರಣೆ ಪಾಕಿಸ್ತಾನ ಪರವೋ ಯಾರ ಪರ? ಎಂದು ಪ್ರಶ್ನಿಸಿದರು. ಆಗ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದಿದ್ದು ಯಾರು? ಕಾಂಗ್ರೆಸ್ ಬದ್ದತೆ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
|
11 |
+
ಈ ವೇಳೆ ಮಧ್ಯಪ್ರವೇಶ ಮಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಯಾರೇ ಆಗಲಿ ಇದನ್ನು ಸರ್ಕಾರ ಲಘುವಾಗಿ ತೆಗೆದುಕೊಳ್ಳಬಾರದು. ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ ಎಂದರೆ ಹೇಗೆ? ಕೂಡಲೇ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟವರಿಗೆ ಸೂಚಿಸಬೇಕೆಂದು ಸೂಚನೆ ನೀಡಿದರು. ನಂತರ ಸದನವನ್ನು ನಡೆಸಲು ಸಭಾಪತಿಗಳು ಮುಂದಾದಾಗ ಪ್ರತಿಪಕ್ಷದ ಸದಸ್ಯರು ತೀವ್ರ ಗದ್ದಲ ಎಬ್ಬಿಸುತ್ತಿದ್ದಂತೆ ಸದನವನ್ನು ಕೆಲಕಾಲ ಮುಂದೂಡಿದರು.
|
eesanje/url_46_221_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್
|
2 |
+
ಬೆಂಗಳೂರು,ಫೆ.28- ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ ಒಂದು ವೇಳೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸೋಮವಾರ ಸಕಾಲಕ್ಕೆ ಆಗಮಿಸಿದ್ದ ಶಾಸಕರ ಹೆಸರುಗಳನ್ನು ಪ್ರಕಟಿಸಿದ ನಂತರ ಸಭಾಧ್ಯಕ್ಷರು ಅಧಿಕಾರಿಗಳಿಂದ ನನಗೆ ಮಾಹಿತಿ ಬಂದಿದೆ.
|
3 |
+
ರಾಷ್ಟ್ರಧ್ವಜವನ್ನು ಸದನದೊಳಗೆ ತಂದಿದ್ದಾರೆ ಎಂಬ ಮಾಹಿತಿ ಇದೆ. ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿಭಾಯಿಸಬೇಕು. ಯಾರೂ ಕೂಡ ಅವಮಾನ ಮಾಡಬಾರದು. ಸದನದ ಹೊರಗೆ ನಡೆದಿರುವ ಘಟನೆ ಬಗ್ಗೆ ಚರ್ಚೆ ಮಾಡಲು ಅಡ್ಡಿಯಿಲ್ಲ. ಅದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
|
4 |
+
ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್
|
5 |
+
ಆಗ ವಿರೋಧಪಕ್ಷದ ಶಾಸಕರ ಆರ್.ಅಶೋಕ್ ಸೇರಿದಂತೆ ಬಿಜೆಪಿಯ ಎಲ್ಲಾ ಶಾಸಕರು ಆಕ್ರೋಶ ವ್ಯಕ್ತಪಡಿಸಿ, ಅಗೌರವ ನಾವು ಮಾಡಿಲ್ಲ, ಒಂದು ವೇಳೆ ನಾವು ಮಾಡಿದ್ದರೆ ಕಾನೂನು ಕ್ರಮ ಜರುಗಿಸಿ ಎಂದು ಸಿಡಿಮಿಡಿಗೊಂಡರು. ಅಶೋಕ್ ಮಾತನಾಡಿ, ಭಾರತದ ಧ್ವಜವನ್ನು ಹಿಡಿದು ಬರುವುದು ತಪ್ಪೇ? ಯಾರು ನಿಮಗೆ ಬಾವುಟವನ್ನು ತಂದಿದ್ದಾರೆ ಎಂದು ಹೇಳಿದರು ಎಂದು ಪ್ರಶ್ನಿಸಿದರಲ್ಲದೆ, ಭಾರತದ ಧ್ವಜವನ್ನು ಹಿಡಿಯಲು ನಮಗೆ ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು.
|
6 |
+
ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಹಲವು ಸದಸ್ಯರು ಎದ್ದು ನಿಂತು ಪ್ರತಿಯಾಗಿ ಮಾತನಾಡಲು ಮುಂದಾದಾಗ ಗೊಂದಲ ಉಂಟಾಯಿತು. ಆಗ ಸಭಾಧ್ಯಕ್ಷರು ಸದನದ ಹೊರಗೆ ನಡೆದಿರುವ ವಿಚಾರ ಬಗ್ಗೆ ಸರ್ಕಾರ ತನಿಖೆ ಮಾಡಲಿ, ತಕ್ಷಣ ತಪ್ಪಿತಸ್ಥರಿದ್ದರೆ ಕ್ರಮ ಕೈಗೊಳ್ಳಲಿ, ಅಂತಹ ವಿಚಾರವನ್ನು ಯಾರೂ ಸಹಿಸುವುದಿಲ್ಲ ಎಂದರು.
|
eesanje/url_46_222_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಹುಕ್ಕಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ : 12.5 ಲಕ್ಷ ಮೌಲ್ಯದ ಫ್ಲೇವರ್ ವಶಕ್ಕೆ..
|
2 |
+
ಬೆಂಗಳೂರು, ಫೆ.27- ಹುಕ್ಕಾ ಕೇಂದ್ರಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ಬಂಧಿಸಿ 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಹುಕ್ಕಾಬಾರ್ಗಳನ್ನು ನಿಷೇಧಿಸಿ ಆದೇಶಿಸಿದ್ದರೂ ಈ ಆದೇಶ ಉಲ್ಲಂಘಿಸಿ ಮಹಾಲಕ್ಷ್ಮಿ ಲೇಔಟ್, ಎಚ್ಎಎಲ್ ಮತ್ತು ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಾನೂನು ಬಾಹಿರವಾಗಿ ಹುಕ್ಕಾಬಾರ್ ನಡೆಸುತ್ತಿದ್ದವರ ವಿರುದ್ಧ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.
|
3 |
+
ಮಹಾಲಕ್ಷ್ಮಿ ಲೇಔಟ್ನಲ್ಲಿ ಇಬ್ಬರನ್ನು ವಶಕ್ಕೆ ಪಡೆದು 2 ಲಕ್ಷ ಮೌಲ್ಯದ ಐದು ಹುಕ್ಕಾ ಪಾಟ್ಗಳು, ಹುಕ್ಕಾ ಫ್ಲೇವರ್ಗಳು, ಚಾರ್ಕೋಲ್ಬಾಕ್ಸ್ ಮತ್ತು ಹುಕ್ಕಾ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ತೆರೆಯಲಾಗಿದ್ದ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು 10 ಲಕ್ಷ ಮೌಲ್ಯದ 710 ಹುಕ್ಕಾ ಫ್ಲೇವರ್ಗಳು, ಹುಕ್ಕಾ ಪ್ಯಾಕೆಟ್-36 ಸೆಟ್, ಫಾಯಿಲ್ ಪೇಪರ್- 28 ಬಾಕ್ಸ್, ಫಿಲ್ಟರ್ಗಳು-19, ಹುಕ್ಕಾ ಪೈಪ್-25 ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ.
|
4 |
+
ಜೆಡಿಎಸ್ ಗೆಲುವಿಗೆ ಬಿಜೆಪಿ ಆಸಕ್ತಿವಹಿಸಿಲ್ಲ: ಡಿಸಿಎಂ ಡಿಕೆಶಿ
|
5 |
+
ಕೆಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರನ್ನು ವಶಕ್ಕೆ ಪಡೆದು ಮೂರು ಹುಕ್ಕಾ ಫ್ಲೇವರ್ಗಳು, ಐದು ಹುಕ್ಕಾ ಪಾಟ್ ಸೆಟ್ ಹಾಗೂ ನಗದು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಯಶಸ್ವಿಯಾಗಿ ಕೈಗೊಂಡಿತ್ತು.
|
eesanje/url_46_222_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್
|
2 |
+
ಬೆಂಗಳೂರು,ಫೆ.27- ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.ರಾಜ್ಯಸಭೆ ಚುನಾವಣೆಯಲ್ಲಿ ಐವರು ಅಭ್ಯರ್ಥಿಗಳು ಕಣದಲ್ಲಿದ್ದರು. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ 3, ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಅವಕಾಶವಿತ್ತು. ಹೆಚ್ಚುವರಿಯಾಗಿರುವ ಜೆಡಿಎಸ್ನ ನಾಯಕ ಹಾಗೂ ಎನ್ಡಿಎ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರಿಗೆ ಬಾಕಿ ಉಳಿದ ಮತಗಳನ್ನು ಹಾಕಲು ಸಲಹೆ ನೀಡಲಾಗಿತ್ತು.
|
3 |
+
ಬಿಜೆಪಿಯಿಂದ ಒಂದು ಹೆಜ್ಜೆ ಹೊರಗಿಟ್ಟಿರುವ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಅಡ್ಡಮತದಾನ ಮಾಡಲಿದ್ದಾರೆ ಎಂಬ ವದಂತಿಗಳು ವ್ಯಾಪಕವಾಗಿದ್ದವು. ಸುಮಾರು 11.15 ಕ್ಕೆ ಆಗಮಿಸಿದ ಎಸ್.ಟಿ.ಸೋಮಶೇಖರ್ ಕೆಲವೇ ನಿಮಿಷಗಳಲ್ಲಿ ಮತ ಹಾಕಿ ಹೊರಬಂದರು. ತಾವು ಆತ್ಮಸಾಕ್ಷಿಯ ಮತ ಹಾಕಿರುವುದಾಗಿ ಹೇಳಿದರು. ಮಾಧ್ಯಮದ ಪ್ರತಿನಿಧಿಗಳು 5 ನಿಮಿಷ ಅಡ್ಡ ಹಾಕಿಕೊಂಡು ನಾನಾ ರೀತಿಯ ಪ್ರಶ್ನೆ ಮಾಡಿದರು. ಆಗ ಒಂದೇ ವಾಕ್ಯದಲ್ಲಿ ಉತ್ತರಿಸಿದ ಎಸ್.ಟಿ.ಸೋಮಶೇಖರ್, ಆತ್ಮಸಾಕ್ಷಿಗನುಗುಣವಾಗಿ ಮತ ಹಾಕಿದ್ದೇನೆ ಎಂದು ಪುನರುಚ್ಚರಿಸಿದರು.
|
4 |
+
ನಿಗದಿತ ಚುನಾವಣಾ ಏಜೆಂಟ್ಗೆ ತಾವು ಮತ ಹಾಕಿರುವುದನ್ನು ತೋರಿಸಿದ್ದಾಗಿ ತಿಳಿಸಿದ್ದಾರೆ. ಮತಗಟ್ಟೆಯಲ್ಲಿ ಬಿಜೆಪಿ ಚುನಾವಣಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅರವಿಂದ್ ಬೆಲ್ಲದ್ ಅವರಿಗೆ ತಮ್ಮ ಮತಪತ್ರವನ್ನು ತೋರಿಸಿದ್ದಾರೆ. ಈ ವೇಳೆ ಅರವಿಂದ್ ಬೆಲ್ಲದ್ ಅವರ ಮುಖ ಬಾಡಿ ಹೋಯಿತು ಎಂದು ಹೇಳಲಾಗಿದೆ.
|
5 |
+
ವಿಧಾನಸೌಧ ಮೊಗಸಾಲೆಯಲ್ಲಿ ಅಡ್ಡ ಮತದಾನದ್ದೇ ಸದ್ದು
|
6 |
+
ಈ ವೇಳೆ ಡಿ.ಕೆ.ಶಿವಕುಮಾರ್ರವರು ಮತಗಟ್ಟೆಯಲ್ಲೇ ಇದ್ದು ಸೋಮಶೇಖರ್ ಮೇಲೆ ತೀವ್ರ ನಿಗಾ ವಹಿಸಿದ್ದರು. ಅಡ್ಡಮತದಾನವಾಗುತ್ತಿದ್ದಂತೆ ಬಿಜೆಪಿಯಲ್ಲೂ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ವಿಜಯೇಂದ್ರ ಮತ್ತು ಜೆಡಿಎಸ್ನ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
|
7 |
+
ಪಕ್ಷಾಂತರ ನಿಷೇಧ ಕಾಯ್ದೆಯ ತೂಗುಗತ್ತಿಯ ನಡುವೆಯೂ ಅಡ್ಡಮತದಾನ ನಡೆದಿರುವುದು ಮಹತ್ವದ ರಾಜಕೀಯ ತಿರುವನ್ನು ಸೃಷ್ಟಿಸಿದೆ. ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ರವರು ಮಧ್ಯಾಹ್ನವಾದರೂ ಮತಗಟ್ಟೆಯತ್ತ ಸುಳಿಯದೇ ಇರುವುದು ಕೇಸರಿ ಪಾಳಯದಲ್ಲಿ ಆತಂಕ ಸೃಷ್ಟಿಸಿತು.
|
eesanje/url_46_222_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಜೆಡಿಎಸ್-ಬಿಜೆಪಿ ನಾಯಕರ ನಡುವೆ ಲೋಕಸಭಾ ಚುನಾವಣೆ ಕುರಿತು ಸ್ವಾರಸ್ಯಕರ ಚರ್ಚೆ
|
2 |
+
ಬೆಂಗಳೂರು,ಫೆ.27- ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಜೆಡಿಎಸ್-ಬಿಜೆಪಿ ನಾಯಕರ ನಡುವೆ ಸ್ವಾರಸ್ಯಕರ ಚರ್ಚೆಯಾಗಿದೆ. ಮತದಾನದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಆಪ್ತ ಸಮಾಲೋಚನೆಯಲ್ಲಿ ತೊಡಗಿದ್ದರು.
|
3 |
+
ಬಿಜೆಪಿಯ ಅಭ್ಯರ್ಥಿಯ ಗೆಲುವಿನ ಬಳಿಕ ಹೆಚ್ಚುವರಿಯಾಗಿರುವ ಮತಗಳನ್ನು ಯಾವ ರೀತಿ ಹಂಚಿಕೆ ಮಾಡಬೇಕು ಎಂಬ ಕುರಿತು ಚರ್ಚೆ ನಡೆಯುತ್ತಿದ್ದಾಗ ಜೆಡಿಎಸ್ ನಾಯಕರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಆಗಮಿಸಿದರು. ರಾಜ್ಯಸಭಾ ಚುನಾವಣೆ ಬಗ್ಗೆ ಬಿಟ್ಟು ಹಾಕಿ. ನಾವು ಸುಮ್ಮನೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ನಮ್ಮ ಮುಂದೆ ಇರುವುದು ಲೋಕಸಭಾ ಚುನಾವಣೆ. ಅದರ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಿ ಎಂದು ಸಲಹೆ ನೀಡಿದ್ದಾರೆ.
|
4 |
+
ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ರವರು ಗಲಾಟೆ ಮಾಡುತ್ತಿದ್ದಾರೆ. ಇತ್ತ ಬೆಂಗಳೂರು ಗ್ರಾಮಾಂತರದಿಂದ ಜಯದೇವ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಬಿಜೆಪಿಯಿಂದ ಕಣಕ್ಕಿಳಿಯುತ್ತಾರೆ ಎಂದು ಚರ್ಚೆಯಾಗುತ್ತಿದೆ. ಮಂಜುನಾಥ್ರನ್ನು ನಿಮ್ಮ ಪಕ್ಷದಿಂದ ಕಣಕ್ಕಿಳಿಸುವುದಾದರೆ ವಿ.ಸೋಮಣ್ಣ ಅವರನ್ನು ತುಮಕೂರಿನಿಂದ ನಮ್ಮ ಪಕ್ಷದ ಅಭ್ಯರ್ಥಿಯಾಗಲು ಬಿಟ್ಟುಕೊಡಿ ಎಂದು ಸಲಹೆ ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
|
5 |
+
ಧಮ್ಕಿ, ಬೆದರಿಸುವುದು ಕಾಂಗ್ರೆಸ್ನವರ ಅಭ್ಯಾಸ: ಕುಮಾರಸ್ವಾಮಿ
|
6 |
+
ತುಮಕೂರಿನಲ್ಲಿ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಅಹಿಂದಾ ಮತಗಳು ಮತ್ತು ಮುದ್ದಹನುಮೇಗೌಡರ ವೈಯಕ್ತಿಕ ಮತಗಳಿಂದ ಕಾಂಗ್ರೆಸ್ ಗೆದ್ದರೂ ಗೆಲ್ಲಬಹುದು. ಅದಕ್ಕೆ ಪ್ರತಿತಂತ್ರ ಎಂದರೆ ಲಿಂಗಾಯತ ಸಮುದಾಯದ ಸೋಮಣ್ಣ ಅವರನ್ನು ಜೆಡಿಎಸ್ನಿಂದ ಕಣಕ್ಕಿಳಿಸಿದರೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಸಮೀಕರಣದಿಂದಾಗಿ ಮೈತ್ರಿ ಅಭ್ಯರ್ಥಿ ಗೆಲ್ಲುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
|
7 |
+
ಜೆಡಿಎಸ್ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದ ಕ್ಷೇತ್ರಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಯುತ್ತಿದ್ದಾಗ ಬಿಜೆಪಿ ನಾಯಕರು ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ನೀವು ಹೈಕಮಾಂಡ್ ಜೊತೆ ನೇರ ಸಂಪರ್ಕದಲ್ಲಿದ್ದೀರ. ನಿಮ್ಮ ಅಭಿಪ್ರಾಯವನ್ನು ಅಲ್ಲಿಯೇ ತಿಳಿಸುವುದು ಸೂಕ್ತ ಎಂದು ಪ್ರತಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
|
8 |
+
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಳೆ ದೆಹಲಿಗೆ ತೆರಳಲಿದ್ದು, ಮೈತ್ರಿ ನಡುವಿನ ಕ್ಷೇತ್ರ ಹಂಚಿಕೆ ಹಾಗೂ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
|
eesanje/url_46_222_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಿಧಾನಸೌಧ ಮೊಗಸಾಲೆಯಲ್ಲಿ ಅಡ್ಡ ಮತದಾನದ್ದೇ ಸದ್ದು
|
2 |
+
ಬೆಂಗಳೂರು,ಫೆ.27- ತೀವ್ರ ಕುತೂಹಲ ಕೆರಳಿಸಿದ ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮುಕ್ತಾಯವಾಗುತ್ತಾ ಬಂದರೂ ಅಡ್ಡಮತದಾನದ ಚರ್ಚೆಗಳು ಸದ್ದು ಮಾಡುತ್ತಲೇ ಇದ್ದವು. ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿಯವರಿಗೆ ಆತ್ಮಸಾಕ್ಷಿಯ ಮತಗಳು ಬರುತ್ತವೆ ಎಂದು ಹೇಳುತ್ತಾ ಗೊಂದಲ ಮೂಡಿಸುತ್ತಿದ್ದರೆ,ಬಿಜೆಪಿ ನಾಯಕರು ಕಾಂಗ್ರೆಸ್ನಿಂದ ಅಡ್ಡಮತದಾನವಾಗಿ ಬಿಜೆಪಿಯ ನಾರಾಯಣ ಸ ಬಾಂಡಗೆಯವರೊಂದಿಗೆ ಎನ್ಡಿಎ ಅಭ್ಯರ್ಥಿಯಾಗಿರುವ ಜೆಡಿಎಸ್ನ ಕುಪೇಂದ್ರ ರೆಡ್ಡಿ ಕೂಡ ಗೆಲ್ಲುತ್ತಾರೆ ಎಂದು ಹೇಳಿಕೊಳ್ಳುತ್ತಾ ತಿರುಗಾಡುತ್ತಿದ್ದರು.
|
3 |
+
ಜೆಡಿಎಸ್ನ ಶಾಸಕ ಜಿ.ಟಿ.ದೇವೇಗೌಡ ನಮ್ಮ ಪಕ್ಷದ ಕುಪೇಂದ್ರ ರೆಡ್ಡಿ ಅನುಭವಿ ರಾಜಕಾರಣಿ. ಅವರಿಗೆ ಆತ್ಮಸಾಕ್ಷಿಯ ಮತಗಳು ಬಿದ್ದು, ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದಕ್ಕೆ ವ್ಯತಿರಿಕ್ತವಾಗಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ನಮ್ಮ ಬಳಿ 135 ಶಾಸಕರಿದ್ದರು. ಒಬ್ಬರು ನಿಧನರಾಗಿದ್ದರಿಂದಾಗಿ ಸಂಖ್ಯಾಬಲ 134ಕ್ಕೆ ಇಳಿದಿದೆ. ಮೂವರು ಪಕ್ಷೇತರರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ಪ್ರತಿ ಅಭ್ಯರ್ಥಿಗಳು ಗೆಲ್ಲಲು 45 ಮತಗಳು ಬೇಕಿದ್ದು, ಕಾಂಗ್ರೆಸ್ ಬಳಿ ಮೂವರು ಅಭ್ಯರ್ಥಿಗಳ ಗೆಲುವಿಗಾಗಿ ತಲಾ 47 ಮತಗಳಿವೆ. ಹೀಗಾಗಿ ನಮ್ಮ ಅಭ್ಯರ್ಥಿಗಳೇ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
|
4 |
+
ಧಮ್ಕಿ, ಬೆದರಿಸುವುದು ಕಾಂಗ್ರೆಸ್ನವರ ಅಭ್ಯಾಸ: ಕುಮಾರಸ್ವಾಮಿ
|
5 |
+
ಸಚಿವ ಪ್ರಿಯಾಂಕ್ ಖರ್ಗೆ, ಜೆಡಿಎಸ್-ಬಿಜೆಪಿ ಶಾಸಕರಿಗೆ ಅಡ್ಡಮತದಾನದ ಭಯ ಇರಬಹುದು. ಆದರೆ ಕಾಂಗ್ರೆಸ್ನಲ್ಲಿ ಇಲ್ಲ. ಚುನಾವಣೆಯಲ್ಲಿ ಹಣದುಂದುವೆಚ್ಚದಂತಹ ಕೆಟ್ಟ ವ್ಯವಸ್ಥೆ ಜಾರಿಗೆ ತಂದವರು ಬಿಜೆಪಿಯವರು ಎಂದು ವಾಗ್ದಾಳಿ ನಡೆಸಿದರು.
|
6 |
+
ಸಚಿವ ಶರಣ ಪ್ರಕಾಶ್ ಪಾಟೀಲ್, ಕಾಂಗ್ರೆಸ್ ಶಾಸಕಾಂಗ ಸಭೆಗೆ ನಮ್ಮ ಎಲ್ಲಾ ಶಾಸಕರೂ ಹಾಜರಾಗಿದ್ದರು. ಯಾರೂ ಅಡ್ಡಮತದಾನ ಮಾಡುವ ಸಾಧ್ಯತೆಗಳಿಲ್ಲ. ನಮ್ಮವರು ಸಂವಿಧಾನ ವಿರೋ ಕೆಲಸ ಮಾಡುವುದಿಲ್ಲ. ಬೇರೆಯವರಿಗೂ ಆಮಿಷ ಒಡ್ಡುವುದಿಲ್ಲ ಎಂದರು.
|
eesanje/url_46_222_2.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸೋಮಶೇಖರ್ ವಿರುದ್ಧ ಕಾನೂನ ಕ್ರಮ: ಆರ್.ಅಶೋಕ್
|
2 |
+
ಬೆಂಗಳೂರು,ಫೆ.27- ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಕಾನೂನ ಕ್ರಮ ಕೈಗೊಳ್ಳಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ನಿನ್ನೆ ಕೂಡ ಎಸ್.ಟಿ.ಸೋಮಶೇಖರ್ ತಮಗೆ ಕರೆ ಮಾಡಿ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದರು.
|
3 |
+
ಈಗ ಅಡ್ಡಮತದಾನ ಮಾಡಿದ್ದಾರೆ. ಶಿವರಾಮ ಹೆಬ್ಬಾರ್ ಏನು ಮಾಡುತ್ತಾರೆ ಗೊತ್ತಿಲ್ಲ. ಕಳೆದ 4 ತಿಂಗಳಿನಿಂದ ಈ ಇಬ್ಬರು ಸಿಎಂ ಹಗೂ ಡಿಸಿಎಂ ಜೊತೆ ತಿರುಗಾಡುತಿದ್ದರು. ವಿಧಾನಸಭಾ ಚುನಾವಣೆ ನಡೆದು 9 ತಿಂಗಳಾಗಿಲ್ಲ. ಆಗಲೇ ಪಕ್ಷಾಂತರ ಮಾಡುವುದನ್ನು ಜನ ಕ್ಷಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
4 |
+
ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್ ಉಚ್ಚಾಟನೆ ಸಾಧ್ಯತೆ!
|
5 |
+
ಶಿವರಾಮ ಹೆಬ್ಬಾರ್ ಇಂದು ಬೆಳಗ್ಗೆ ಕೂಡ ತಮ್ಮ ಸಂಪರ್ಕದಲ್ಲಿದ್ದು ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದಿದ್ದರು. ಈಗ ಅವರ ನಡವಳಿಕೆ ಪ್ರಶ್ನಾರ್ಹವಾಗಿದೆ ಎಂದರು. ಎಸ್.ಟಿ.ಸೋಮಶೇಖರ್ ಬಿಜೆಪಿಯಲ್ಲಿ ಸಚಿವರಾಗಿದ್ದರು. ಪ್ರಭಾವಿ ಜಿಲ್ಲೆಯಲ್ಲಿ ಮೈಸೂರಿನ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದರು. ಈಗ ಅಡ್ಡ ಮತದಾನ ಮಾಡಿ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡ್ಡಮತದಾನ, ಪಕ್ಷ ದ್ರೋಹದ ವಿರುದ್ಧ ಆಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ವಕೀಲ ವಿವೇಕ ರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ. ಕಾನೂನು ತಜ್ಞರ ಜೊತೆ ಕೂಡ ಸಮಲೋಚನೆ ನಡೆಯುತ್ತಿದೆ ಸಾಧ್ಯವಿರುವ ಎಲ್ಲಾ ಕಾನುನು ಕ್ರಮ ಕೈಗೊಳ್ಳುತ್ತೇವೆ ಎಂದರು.
|
6 |
+
ಈ ಇಬ್ಬರೂ ಶಾಸಕರಿಗೂ ವ್ಹಿಪ್ ಜಾರಿ ಮಾಡಲಾಗಿತ್ತು. ಅವರ ಕಚೇರಿ ಹಾಗೂ ಮನೆಗಳಿಗೆ ವ್ಹಿಪ್ ಕಳುಹಿಸುವ ಜೊತೆಗೆ ಆಪ್ತ ಸಹಾಯಕರಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗಿದೆ. ಪಕ್ಷದ ಚಿಹ್ನೆಯಡಿ ಗೆದ್ದು ದ್ರೋಹ ಮಾಡಿರುವುದನ್ನು ಮತದಾರರು ಕ್ಷಮಿಸಲ್ಲ ಎಂದು ಪುನರುಚ್ಚರಿಸಿದರು.
|
7 |
+
ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ
|
8 |
+
ಎನ್ಡಿಎ ಅಭ್ಯರ್ಥಿಯಾಗಿರುವ ಜೆಡಿಎಸ್ನ ಕುಪೇಂದ್ರರೆಡ್ಡಿ ಸೋಲು ಯಾವುದೇ ಮುಜುಗರ ಉಂಟುಮಾಡಿಲ್ಲ. ಪ್ರಯೋಗಾತ್ಮಕವಾಗಿ ಅವರನ್ನು ಕಣಕ್ಕಿಳಿಸಲಾಗಿತ್ತು. ಹೀಗಾಗಿ ಬಿಜೆಪಿ ಅಥವಾ ಜೆಡಿಎಸ್ನ ಸೋಲು ಎಂದು ಪರಿಗಣಿಸುವ ಅಗತ್ಯವಿಲ್ಲ ಎಂದರು.
|
eesanje/url_46_222_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಜೆಡಿಎಸ್ ಗೆಲುವಿಗೆ ಬಿಜೆಪಿ ಆಸಕ್ತಿವಹಿಸಿಲ್ಲ: ಡಿಸಿಎಂ ಡಿಕೆಶಿ
|
2 |
+
ಬೆಂಗಳೂರು,ಫೆ.27-ಬಿಜೆಪಿ-ಜೆಡಿಎಸ್ ಮೈತ್ರಿ ಸರಿಯಿದೆಯೋ, ಇಲ್ಲವೋ ಎಂಬುದನ್ನು ರಾಜ್ಯಸಭೆ ಚುನಾವಣಾ ಫಲಿತಾಂಶ ನೀಡಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಮತದಾರರು ಹಾಗೂ ಶಾಸಕರು ಒಪ್ಪಿಕೊಳ್ಳಬೇಕು. ಅದು ಸರಿಯೇ ಅಥವಾ ಇಲ್ಲವೇ ಎಂಬುದನ್ನು ಜನ ತೀರ್ಮಾನಿಸಬೇಕು. ಈ ಫಲಿತಾಂಶ ಅದನ್ನು ಸಾಬೀತು ಪಡಿಸಲಿದೆ ಎಂದರು.
|
3 |
+
ಚುನಾವಣಾ ಅಭ್ಯರ್ಥಿಗಳು ಆತ್ಮಸಾಕ್ಷಿ ಮತ ಕೇಳಿದ್ದರು. ಅದರಂತೆ ಮತಗಳು ಚಲಾವಣೆಯಾಗಿರಬಹುದು. ಎಸ್.ಟಿ.ಸೋಮಶೇಖರ್ ಅವರು ಯಾರ ಪರ ಮತ ಹಾಕಿದ್ದಾರೆ ಗೊತ್ತಿಲ್ಲ. ಅವರ ಹೇಳಿಕೆ ನೋಡಿಲ್ಲ. ಒಂದು ವೇಳೆ ಅಡ್ಡ ಮತದಾನವಾಗಿದ್ದರೆ ಅದರ ಕುರಿತು ಹೇಳಿಕೆ ನೀಡಬೇಕಿರುವುದು ಬಿಜೆಪಿ ಎಂದು ಸ್ಪಷ್ಟಪಡಿಸಿದರು.
|
4 |
+
ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ
|
5 |
+
ಜೆಡಿಎಸ್ನ ಕುಪೇಂದ್ರರೆಡ್ಡಿ ಅವರನ್ನು ಗೆಲ್ಲಿಸಲು ಬಿಜೆಪಿ ಯಾವ ಪ್ರಯತ್ನವನ್ನೂ ಮಾಡಿಲ್ಲ. ಬಿಜೆಪಿ ಅಭ್ಯರ್ಥಿ ಗೆಲ್ಲಲು 45 ಮತಗಳು ಬೇಕಿತ್ತು. ಬಾಕಿ ಉಳಿದ ಮತಗಳನ್ನು ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಯವರಿಗೆ ಹಾಕಿಸಬಹುದಿತ್ತು. ಆದರೆ ಬಿಜೆಪಿ ತಮ್ಮ ಅಭ್ಯರ್ಥಿಗೆ 48 ಮತಗಳನ್ನು ಹಾಕಿಸಿದೆ. ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಬಿಜೆಪಿ ಆಸಕ್ತಿ ವಹಿಸಿಲ್ಲ ಎಂಬುದು ಗೊತ್ತಾಗುತ್ತದೆ ಎಂದರು.
|
eesanje/url_46_222_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್ ಉಚ್ಚಾಟನೆ ಸಾಧ್ಯತೆ!
|
2 |
+
ಬೆಂಗಳೂರು,ಫೆ.27- ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿ ಪಕ್ಷಕ್ಕೆ ಭಾರೀ ಮುಜುಗರ ಸೃಷ್ಟಿಸಿರುವ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದಲೇ ಉಚ್ಚಾಟಿಸುವ ಸಾಧ್ಯತೆ ಇದೆ.ಪಕ್ಷದ ವ್ಹಿಪ್ ಉಲ್ಲಂಘಿಸಿ ಕಾಂಗ್ರೆಸ್ ಪರವಾಗಿ ಮತ ಹಾಕಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಘಟಕ ಸೋಮಶೇಖರ್ರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸಬೇಕೆಂದು ಕೇಂದ್ರದ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಲಿದೆ. ಶಾಸಕರಾಗಿರುವುದರಿಂದ ಸೋಮಶೇಖರ್ ಮೇಲೆ ರಾಜ್ಯಘಟಕ ಶಿಸ್ತು ಕ್ರಮ ಜರುಗಿಸಲು ಆಗುವುದಿಲ್ಲ. ಹೀಗಾಗಿ ಅವರ ವಿರುದ್ಧ ಕೇಂದ್ರದ ಶಿಸ್ತುಸಮಿತಿಯೇ ನಿರ್ಧಾರ ತೆಗೆದುಕೊಳ್ಳಬೇಕಾಗಿರುವುದರಿಂದ ಒಂದೆರಡು ದಿನಗಳಲ್ಲೇ ಶಿಫಾರಸು ಪತ್ರ ರವಾನೆಯಾಗಲಿದೆ ಎಂದು ಹೇಳಲಾಗುತ್ತಿದೆ.
|
3 |
+
ಎಸ್.ಟಿ.ಸೋಮಶೇಖರ್ ಅಡ್ಡಮತದಾನ ಮಾಡಿರುವುದು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಮುಜುಗರ ಸೃಷ್ಟಿಸಿದೆ. ಭವಿಷ್ಯದಲ್ಲಿ ಯಾರೊಬ್ಬರೂ ಪಕ್ಷದ ಶಿಸ್ತು ಉಲ್ಲಂಘನೆ ಮಾಡಬಾರದೆಂದರೆ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೇಂದ್ರಕ್ಕೆ ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ.
|
4 |
+
ಈಗಾಗಲೇ ವಿಜಯೇಂದ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಚರ್ಚಿಸಿದ್ದು, ಪಕ್ಷದಿಂದಲೇ ಉಚ್ಚಾಟನೆ ಮಾಡುವ ಸಾಧ್ಯತೆಗಳು ನಿಚ್ಛಳವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಯಶವಂತಪುರದಿಂದ ಗೆದ್ದ ನಂತರ ಸೋಮಶೇಖರ್ ಬಿಜೆಪಿಯಿಂದ ಅಂತರ ಕಾಪಾಡಿಕೊಂಡು ಕಾಂಗ್ರೆಸ್ಗೆ ಹತ್ತಿರವಾಗಿದ್ದರು.
|
5 |
+
4 ಡ್ರಗ್ ಪೆಡ್ಲರ್ಗಳ ಬಂಧನ : 2.35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
|
6 |
+
ಇತ್ತೀಚೆಗೆ ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ ಮತಯಾಚನೆ ಮಾಡಿ ಬಿಜೆಪಿ-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎ.ಪಿ.ರಂಗನಾಥ್ ವಿರುದ್ಧವಾಗಿ ಕೆಲಸ ಮಾಡಿದ್ದರು. ಹೀಗೆ ಪ್ರತಿಹಂತದಲ್ಲೂ ಬಿಜೆಪಿಗೆ ಮುಜುಗರ ಸೃಷ್ಟಿಸುತ್ತಿರುವ ಎಸ್.ಟಿ.ಸೋಮಶೇಖರ್ರವರನ್ನು ಪಕ್ಷದಿಂದಲೇ ಹೊರ ಹಾಕಬೇಕೆಂಬ ಒತ್ತಡಗಳು ಕೇಳಿಬಂದಿವೆ.
|
7 |
+
ಶಾಸಕ ಸ್ಥಾನಕ್ಕೆ ಸೋಮಶೇಖರ್ ರಾಜೀನಾಮೆ?
|
8 |
+
ಈ ಹಿಂದೆ ವಿಜಯ್ಮಲ್ಯ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಬಿಜೆಪಿಯ ಹಲವು ಶಾಸಕರು ಪಕ್ಷದ ಅಕೃತ ಅಭ್ಯರ್ಥಿ ವಿರುದ್ಧವಾಗಿ ಮತ ಚಲಾಯಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿ ಹಲವು ಶಾಸಕರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿತ್ತು. ಈಗ ಸೋಮಶೇಖರ್ ವಿರುದ್ಧವೂ ಇದೇ ಅಸ್ತ್ರವನ್ನು ಬಳಸಲು ಬಿಜೆಪಿ ಮುಂದಾಗಿದೆ. ಇದಕ್ಕೆ ಮುನ್ಸೂಚನೆ ಎಂಬಂತೆ ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ನಾವು ಶಿಸ್ತು ಕ್ರಮ ಜರುಗಿಸುವಂತೆ ವಿಧಾನಸಭೆಯ ಸಭಾಧ್ಯಕ್ಷರಿಗೆ ದೂರು ನೀಡುತ್ತೇವೆಂದು ಹೇಳಿದ್ದಾರೆ.
|
eesanje/url_46_222_5.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅಡ್ಡಮತದಾನ: ಅನರ್ಹತೆ ಪರ- ವಿರೋಧ ಚರ್ಚೆ
|
2 |
+
ಬೆಂಗಳೂರು,ಫೆ.27- ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವವರ ಶಾಸಕ ಸ್ಥಾನದ ಅನರ್ಹತೆ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ರಾಜಕೀಯವಾಗಿ ಮತ್ತೊಂದು ವಿಚಾರಮಂಥನಕ್ಕೆ ಅವಕಾಶ ಮಾಡಿಕೊಟ್ಟಿದೆ. ರಾಜ್ಯಸಭಾ ಚುನಾವಣೆಯಲ್ಲಿ ಮುಕ್ತ ಮತದಾನವಾಗಿರುವುದರಿಂದ ಅಡ್ಡಮತದಾನ ಮಾಡಿದವರನ್ನು ಅನರ್ಹಗೊಳಿಸಲು ಅವಕಾಶ ಇಲ್ಲ ಎಂದು ಹಿರಿಯ ವಕೀಲರು ಆದ ಕಾಂಗ್ರೆಸ್ ಪಕ್ಷದ ಶಾಸಕ ಎ.ಎಸ್.ಪೊನ್ನಣ್ಣ ಪ್ರತಿಪಾದಿಸಿದ್ದಾರೆ.
|
3 |
+
ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದಾರೆ ಎಂದು ಹೇಳಲಾದ ಎಸ್.ಟಿ.ಸೋಮಶೇಖರ್ ಸೇರಿದಂತೆ ಯಾವುದೇ ಶಾಸಕರನ್ನು ಅನರ್ಹಗೊಳಿಸಲು ಅವಕಾಶ ಇಲ್ಲ. ಹೀಗಾಗಿ ರಾಜಕೀಯ ಪಕ್ಷಗಳು ನೀಡಿದ ವ್ಹಿಪ್ಗಳು ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ರಾಜ್ಯಪ್ರಧಾನಕಾರ್ಯದರ್ಶಿ ಹಾಗೂ ಶಾಸಕರಾಗಿರುವ ವಿ.ಸುನಿಲ್ಕುಮಾರ್ರವರು ಅಡ್ಡಮತದಾನ ಶಾಸಕರ ಅನರ್ಹತೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.
|
4 |
+
ಪಕ್ಷ ರಾಜ್ಯಸಭೆಯಲ್ಲಿ ಯಾರಿಗೆ ಮತ ಹಾಕಬೇಕೆಂದು ವ್ಹಿಪ್ ನೀಡಿದೆ. ಅದನ್ನು ಉಲ್ಲಂಘಿಸುವುದು ಪಕ್ಷಾಂತರ ನಿಷೇಧ ಕಾಯ್ದೆಗೆ ಒಳಪಡುತ್ತದೆ. ನಮ್ಮ ಪಕ್ಷದಿಂದ ಬೂತ್ ಏಜೆಂಟ್ ಆಗಿರುವವರು ಯಾರು, ಯಾರಿಗೆ ಮತ ಹಾಕಿದ್ದಾರೆ ಎಂಬುದನ್ನು ಗುರುತು ಮಾಡಿಕೊಂಡಿದ್ದಾರೆ. ಒಂದು ವೇಳೆ ಅಡ್ಡಮತದಾನವಾಗಿದ್ದರೆ ಅದನ್ನು ಪರಿಶೀಲಿಸಿ ಪಕ್ಷವು ಕ್ರಮ ಕೈಗೊಳ್ಳುತ್ತದೆ ಮತ್ತು ಶಾಸಕರನ್ನು ಅನರ್ಹಗೊಳಿಸಲು ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳುವುದಾಗಿ ಹೇಳಿದರು.
|
5 |
+
4 ಡ್ರಗ್ ಪೆಡ್ಲರ್ಗಳ ಬಂಧನ : 2.35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
|
6 |
+
ವಿಚಾರ ಮಂಥನ :ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪರವಾಗಿ ಹಲವಾರು ಮಂದಿ ಅಡ್ಡಮತದಾನ ಮಾಡಿದ್ದಾರೆ ಎಂಬ ಚರ್ಚೆಗಳು ವ್ಯಾಪಕವಾಗಿದ್ದವು. ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಅಡ್ಡಮತದಾನ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಶಿವರಾಂ ಹೆಬ್ಬಾರ್ ಮಧ್ಯಾಹ್ನದವರೆಗೂ ಮತಗಟ್ಟೆಗೆ ಬಂದಿರಲಿಲ್ಲ. ಇನ್ನು ಜೆಡಿಎಸ್ನ ಶಾಸಕರಾದ ಕರೆಮ್ಮ, ತಾವು ತಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿಯವರಿಗೇ ಮತ ಹಾಕಿರುವುದಾಗಿ ಸ್ಪಷ್ಪಡಿಸಿದರು.
|
7 |
+
ಮತ್ತೊಬ್ಬ ಶಾಸಕ ಶರಣಗೌಡ ಕಂದಕೂರ್, ನಾವು ಆತ್ಮಸಾಕ್ಷಿಗನುಗುಣವಾಗಿ ಮತ ಹಾಕಿದ್ದೇನೆ. ಪಕ್ಷ ವ್ಹಿಪ್ ನೀಡಿದೆ. ಅದನ್ನು ಉಲ್ಲಂಘನೆ ಮಾಡಿಲ್ಲ. ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.ಇನ್ನು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಶಾಸಕ ಜನಾರ್ದನ ರೆಡ್ಡಿ, ತಾವು ಆತ್ಮಸಾಕ್ಷಿ ಮತ ಚಲಾಯಿಸಿರುವುದಾಗಿ ಹೇಳಿದರು. ಪದೇ ಪದೇ ಪ್ರಶ್ನೆಗಳು ಎದುರಾದಾಗ ನಾನು ಯಾ���ಿಗೆ ಮತ ಹಾಕಿದ್ದೇನೆ ಎಂದು ನಿಮಗೆ ಏಕೆ ಹೇಳಬೇಕು ಎಂದು ಖಾರವಾಗಿ ಪ್ರಶ್ನಿಸಿದರು.
|
8 |
+
ಪಕ್ಷೇತರರಾದ ಲತಾ ಮಲ್ಲಿಕಾರ್ಜುನ್, ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ. ಪಕ್ಷೇತರರಾಗಿರುವುದರಿಂದ ಇವರಿಗೆ ಯಾವುದೇ ವ್ಹಿಪ್ಗಳು ಅನ್ವಯಾಗುವುದಿಲ್ಲ. ಕಾನೂನಿನ ಗೋಜಲೂ ಇರುವುದಿಲ್ಲ. ಆದರೆ ಪಕ್ಷದ ಚಿನ್ಹೆ ಹೇಳಿ ಚುನಾಯಿತರಾಗಿರುವ ಶಾಸಕರು ಅಡ್ಡಮತದಾನ ಮಾಡಿದ ವೇಳೆ ಅನರ್ಹತೆಗೆ ಒಳಗಾಗುತ್ತಾರೆ ಎಂಬ ಚರ್ಚೆಗಳಿವೆ.
|
9 |
+
ಮೂಲಭೂತ ಪ್ರಶ್ನೆಯೆಂದರೆ, ಈ ಚುನಾವಣೆಯಲ್ಲಿ ಪ್ರತಿಯೊಂದು ರಾಜಕೀಯ ಪಕ್ಷದ ಪರವಾಗಿ ಮತಗಟ್ಟೆಯಲ್ಲಿ ಒಬ್ಬ ಏಜೆಂಟ್ ಹಾಜರಿರುತ್ತಾರೆ. ಶಾಸಕರು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಕ್ರಮಸಂಖ್ಯೆಯನ್ನು ನಮೂದಿಸಿ ಮತ ಹಾಕಬೇಕು. ಮತ ಹಾಕುವ ಮೊದಲು ನೋಂದಣಿ ಪುಸ್ತಕದಲ್ಲಿ ಹೆಸರು ಹಾಗೂ ಇತರ ವಿವರಗಳನ್ನು ದಾಖಲಿಸಲಾಗುತ್ತದೆ.
|
10 |
+
ಆದರೆ ಮತಪತ್ರದಲ್ಲಿ ಮತ ಹಾಕಿದವರ ಹೆಸರಿನ ಉಲ್ಲೇಖ ಇರುವುದಿಲ್ಲ. ಮತ ಚಲಾಯಿಸಿದ ಕ್ರಮ ಸಂಖ್ಯೆ ಮಾತ್ರ ಗೋಚರವಾಗುತ್ತದೆ. ಮತ ಹೇಳಿಕೆಯಲ್ಲಿ ಯಾರು, ಯಾರಿಗೆ ಮತ ಹಾಕಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿಯಲು ಸಾಧ್ಯವಿಲ್ಲ ಮತ್ತು ಅದನ್ನು ಸಾಬೀತುಪಡಿಸುವುದೂ ಕೂಡ ಕಷ್ಟಸಾಧ್ಯ. ಚುನಾವಣಾ ಏಜೆಂಟ್ಗೆ ಶಾಸಕರು ಮತಪತ್ರವನ್ನು ತೋರಿಸಿದಾಗ ಅಡ್ಡಮತದಾನವಾಗಿರುವುದು ಸ್ಪಷ್ಟವಾಗಿ ಕಂಡುಬಂದರೂ ಕೂಡ ಅದನ್ನು ಸಾಬೀತುಪಡಿಸುವುದು ಸದ್ಯದ ನಿಯಮಾವಳಿಗಳಲ್ಲಿ ಗೊಂದಲಕಾರಿಯಾಗಿದೆ ಎಂದು ಮೂಲಗಳು ತಿಳಿಸಿವೆ.
|
11 |
+
ಹೀಗಾಗಿ ಕಾಂಗ್ರೆಸ್ ಪಕ್ಷದ ಧುರೀಣರು, ಜೆಡಿಎಸ್-ಬಿಜೆಪಿ ಶಾಸಕರಿಗೆ ಭಯ ಬೀಳಬೇಡಿ, ಆತ್ಮಸಾಕ್ಷಿಯ ಮತ ಹಾಕಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದಾಗಿ ತಿಳಿದುಬಂದಿದೆ. ಅದರನ್ವಯ ಒಬ್ಬರು ಅಡ್ಡಮತದಾನ ಮಾಡಿರುವುದು ಖಚಿತವಾಗಿದ್ದು, ಮತ್ತೊಬ್ಬರು ಅಡ್ಡಮತದಾನ ಮಾಡಿದ್ದಾರೆಯೇ? ಇಲ್ಲವೇ? ಎಂಬ ಗೊಂದಲ ಮುಂದುವರೆದಿದೆ.
|
12 |
+
ಕೇರಳದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ
|
13 |
+
ಇವರ ಅನರ್ಹತೆ ಬಗ್ಗೆ ಬಿಜೆಪಿ ತಕ್ಷಣವೇ ಕಾನೂನು ಪ್ರಕ್ರಿಯೆ ಆರಂಭಿಸಲಿದೆ ಎಂದು ಹೇಳಲಾಗಿದೆ. ಆದರೆ ಅದು ಅರೆ ನ್ಯಾಯಾಲಯವಾಗಿರುವ ಸಭಾಧ್ಯಕ್ಷರ ಕಚೇರಿಯಲ್ಲಿ ಇತ್ಯರ್ಥವಾಗಲು ಕಾಲಾವಕಾಶದ ಅಗತ್ಯವಿದೆ ಎಂದು ಹೇಳಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಪಕ್ಷದ ಚಿನ್ಹೆ ಬಳಕೆ ಮಾಡುವುದಿಲ್ಲ. ಹೀಗಾಗಿ ಇದು ಮುಕ್ತ ಮತದಾನದ ಚುನಾವಣೆಯಾಗಿದೆ. ವ್ಹಿಪ್ ನೀಡಲು ಅವಕಾಶ ಇಲ್ಲ. ಪಕ್ಷಾಂತರ ನಿಷೇಧ ಕಾಯ್ದೆ ಕೂಡ ಅನ್ವಯವಾಗುವುದಿಲ್ಲ. ಈ ಕುರಿತು ಸುಪ್ರೀಂಕೋರ್ಟಿನ ಹಲವು ತೀರ್ಪುಗಳು ಸ್ಪಷ್ಟವಾದ ನಿರ್ದೇಶನ ನೀಡಿವೆ ಎಂದು ಹೇಳಿದರು.
|
eesanje/url_46_222_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ
|
2 |
+
ಬೆಂಗಳೂರು, ಫೆ.27- ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಗುರಿಯಾಗಿಟ್ಟುಕೊಂಡು ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ನಗರ ಪೊಲೀಸರು ಬಂಧಿಸಿ 70 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
|
3 |
+
ಕೆಆರ್ ಪುರ:ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಬೈಕ್ನಲ್ಲಿ ಬಂದ ದರೋಡೆಕೋರರು ಅವರ ಕೈಯಲಿದ್ದ ಮೊಬೈಲ್ ಪೋನ್ ಕಿತ್ತುಕೊಂಡು ಪರಾರಿಯಾಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 20 ಲಕ್ಷ ಬೆಲೆ ಬಾಳುವ ಒಟ್ಟು 68 ವಿವಿಧ ಕಂಪನಿಯ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಮಹದೇವಪುರ ಪೊಲೀಸ್ ಠಾಣೆಯ ಒಟ್ಟು 9 ಮೊಬೈಲ್ ದರೋಡೆ ಪ್ರಕರಣಗಳು ಪತ್ತೆಯಾಗಿದ್ದು ಹೆಚ್ಚಿನ ತನಿಖೆ ಕೈಕೊಳ್ಳಲಾಗಿದೆ.
|
4 |
+
ಈ ಇಬ್ಬರು ಆರೋಪಿಗಳು ನಗರದ ಜನನಿಬಿಡ ಪ್ರದೇಶಗಳಾದ ಟಿನ್ಪ್ಯಾಕ್ಟರಿ, ಮಾರತ್ತಹಳ್ಳಿ, ಹೆಬ್ಬಾಳ, ಸಿಲ್ಕ್ ಬೋರ್ಡ್ ಮುಂತಾದ ಸ್ಥಳಗಳಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಒಂಟಿ ವ್ಯಕಿಗಳನ್ನು ಗುರಿಯಾಗಿಟ್ಟುಕೊಂಡು ಅವರು ಗಳಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದರು.
|
5 |
+
ನಂತರ ಅವುಗಳನ್ನು ತಮ್ಮ ಸ್ವಂತ ಊರು ಹಿರಿಯೂರಿನಲ್ಲಿ ಮಾರಾಟ ಮಾಡಿ ಬಂದ ಹಣದಿಂದ ದುಶ್ಚಟಗಳಿಗೆ ಬಳಸಿಕೊಳ್ಳುತ್ತಿದ್ದುದ್ದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಕಾರ್ಯಚರಣೆಯನ್ನು ವೈಟ್ಫಿಲ್ಡ್ ವಿಭಾಗದ, ಉಪ ಪೊಲೀಸ್ ಆಯುಕ್ತರಾದ ಡಾ. ಶಿವಕುಮಾರ್, ಸಹಾಯಕ ಪೊಲೀಸ್ ಆಯುಕ್ತರಾದ ರೀನಾ ಸುವರ್ಣ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಯವರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಗೊಳಿಸಿರುತ್ತಾರೆ.
|
6 |
+
ಇಬ್ಬರ ಬಂಧನ:ಇಂದಿರಾನಗರ ಠಾಣೆ ಪೊಲೀಸರು ಇಬ್ಬರು ಮೊಬೈಲ್ ಸುಲಿಗೆಕೋರರನ್ನು ಬಂಧಿಸಿ ಎರಡು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ವಿನೋದ್ ಮತ್ತು ಸ್ಟೀಫನ್ ರಾಜು ಬಂತ ಮೊಬೈಲ್ ದರೋಡೆಕೋರರು. ಜನವರಿ 31ರಂದು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ವ್ಯಕ್ತಿಯೊಬ್ಬರಿಗೆ ಕೈಯಿಂದ ಹಲ್ಲೆ ಮಾಡಿ, ಹೆದರಿಸಿ ಅವರ ಜೇಬಿನಲ್ಲಿದ್ದ ಒಂದು ಒಪೋ ಮೊಬೈಲ್ ಮತ್ತು 2,300 ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದರು.
|
7 |
+
4 ಡ್ರಗ್ ಪೆಡ್ಲರ್ಗಳ ಬಂಧನ : 2.35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
|
8 |
+
ನಂತರ ಅವರು 112ಗೆ ಕರೆಮಾಡಿ ಮೊಬೈಲ್ ಹಾಗೂ ನಗದು ಹಣವನ್ನು ಕಿತ್ತುಕೊಂಡು ಹೋಗಿರುವ ಬಗ್ಗೆ ದೂರು ನೀಡಿದ್ದರು. 112ನಿಂದ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದ ಹೊಯ್ಸಳ-30 ರ ವಾಹನದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಈ ದೂರನ್ನು ಪರಿಶೀಲಿಸುವಂತೆ ಸೂಚಿಸಿದ್ದರು.ಅದರಂತೆ ಹೊಯ್ಸಳ ಅಧಿಕಾರಿ ಮತ್ತು ಸಿಬ್ಬಂದಿಯವರು ಕೂಡಲೆ ಕಾ��್ಯೋನ್ಮುಖರಾಗಿ ಸುಲಿಗೆ ಮಾಡಿ ಮೋಟಾರ್ ಸೈಕಲ್ನಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ.
|
9 |
+
ಆರೋಪಿಗಳು ಇಂದಿರಾನಗರದ ಪೊಲೀಸ್ಠಾಣೆಯ-1 ಸುಲಿಗೆ ಪ್ರಕರಣ, ಹಲಸೂರು ಪೊಲೀಸ್ ಠಾಣೆಯ-1 ಸುಲಿಗೆ ಪ್ರಕರಣ, ಹೆಣ್ಣೂರು ಪೊಲೀಸ್ ಠಾಣೆಯ-3 ದರೋಡೆಗೆ ಯತ್ನದ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ಯಿಂದ ತಿಳಿದು ಬಂದಿರುತ್ತದೆ. ಇಂದಿರಾನಗರ ಪೊಲೀಸ್ಠಾಣೆಯ ಇನ್ಸ್ಪೆಕ್ಟರ್ ಸುದರ್ಶನ್ ಮತ್ತು ಸಿಬ್ಬಂದಿ ಈ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
|
eesanje/url_46_222_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
4 ಡ್ರಗ್ ಪೆಡ್ಲರ್ಗಳ ಬಂಧನ : 2.35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
|
2 |
+
ಬೆಂಗಳೂರು, ಫೆ.27- ಸಿಸಿಬಿ ಪೊಲೀಸರು ಡ್ರಗ್ ಪೆಡ್ಲರ್ಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡು ಮೂವರು ವಿದೇಶಿ ಡ್ರಗ್ ಪೆಡ್ಲರ್ಗಳು ಸೇರಿದಂತೆ ನಾಲ್ವರನ್ನು ಬಂಧಿಸಿ ಅವರುಗಳಿಂದ ಒಟ್ಟು 2.35 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 730 ಗ್ರಾಂ ಎಂ.ಡಿ.ಎಂಎ ಕ್ರಿಸ್ಟೆಲ್, 1273 ಎಕ್ಸ್ಟಸಿ ಪಿಲ್ಸ್ಗಳು, 42 ಗ್ರಾಂ ಹೈಡ್ರೋಗಾಂಜ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
|
3 |
+
ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ಇಬ್ಬರು ವಿದೇಶಿ ಡ್ರಗ್ಪೆಡ್ಲರ್ಗಳು ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದರು. ಒಬ್ಬ ಮೊದಲಿಗೆ ಮುಂಬೈನಲ್ಲಿ ನೆಲೆಸಿ ಎನ್ಡಿಪಿಎಸ್ ಪ್ರಕರಣದಲ್ಲಿ ಜೈಲಿನಲ್ಲಿದ್ದನು. ಈತನು ಜೈಲಿನಿಂದ ಬಿಡುಗಡೆಯಾದ ನಂತರ ನಗರಕ್ಕೆ ಬಂದು ಮತ್ತೊಬ್ಬ ವಿದೇಶಿ ಡ್ರಗ್ಪೆಡ್ಲರ್ನ ಜೊತೆಗೂಡಿ ಪರಿಚಯಸ್ಥ ಗಿರಾಕಿಗಳಿಗೆ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಮೂಲಕ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದುದ್ದು ತನಿಖೆಯಿಂದ ತಿಳಿದು ಬಂದಿದೆ.
|
4 |
+
ಎಸ್ಟಿಎಸ್ ವಿರುದ್ಧ ಹೆಚ್ಡಿಕೆ ಟೀಕೆ: ಸ್ಥಳದಿಂದ ಕಾಲ್ಕಿತ್ತ ಅಶೋಕ್, ಬೊಮ್ಮಾಯಿ
|
5 |
+
ಈ ಪ್ರಕರಣದಲ್ಲಿ 51 ಲಕ್ಷ ಮೌಲ್ಯದ 500 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 2 ಮೊಬೈಲ್ ಫೋನ್ಗಳು ಹಾಗೂ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಓರ್ವ ವಿದೇಶಿ ಡ್ರಗ್ಪೆಡ್ಲರ್ ಕಳೆದ ಫೆಬ್ರವರಿಯಲ್ಲಿ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ಇಲ್ಲಿನ ಪರಿಚಯಸ್ಥ ಮತ್ತು ಇತರೆ ವಿದೇಶಿ ಪ್ರಜೆಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದನು.
|
6 |
+
ಈತನಿಂದ 1.81 ಕೋಟಿ ಮೌಲ್ಯದ 236 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 1273 ಎಕ್ಸ್ಟಸಿ ಪಿಲ್ಸ್ಗಳು ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಒಂದು ಮೊಬೈಲ್ ಫೋನ್ನ್ನು ವಶಪಡಿಸಿಕೊಳ್ಳಲಾಗಿದೆ. ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯು ಇಂಡಿಯನ್ ಫೋಸ್ಟ್ ಮೂಲಕ ಹೈಡ್ರೋಗಾಂಜಾವನ್ನು ಖರೀದಿಸಿ ತರಿಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ, ಆತನನ್ನು ವಶಕ್ಕೆ ಪಡೆದುಕೊಂಡು 3 ಲಕ್ಷ ಮೌಲ್ಯದ 42 ಗ್ರಾಂ ಹೈಡ್ರೋಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಕೈಗೊಂಡಿತ್ತು.
|
eesanje/url_46_222_8.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಶಾಸಕ ಸ್ಥಾನಕ್ಕೆ ಸೋಮಶೇಖರ್ ರಾಜೀನಾಮೆ?
|
2 |
+
ಬೆಂಗಳೂರು,ಫೆ.27- ಮಹತ್ವದ ಬೆಳವಣಿಗೆಯಲ್ಲಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಇಂದು ಸಂಜೆಯೇ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಬಲವಾಗಿ ಹಬ್ಬಿದೆ. ಸಂಜೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಲಿರುವ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
|
3 |
+
ಈಗಾಗಲೇ ಉಭಯ ಶಾಸಕರು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಮಯಾವಕಾಶವನ್ನು ಕೇಳಿದ್ದಾರೆ. ಫಲಿತಾಂಶ ಪ್ರಕಟಗೊಂಡ ನಂತರ ತಮ್ಮನ್ನು ಭೇಟಿಯಾಗಬಹುದು ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಭಾಧ್ಯಕ್ಷರು ಅಂಗೀಕರಿಸಿದ ನಂತರ ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆ ಮಾತುಕತೆ ನಡೆಸಿರುವ ಇಬ್ಬರೂ ಶಾಸಕರು ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
|
4 |
+
ಮೂಲಗಳ ಪ್ರಕಾರ ಯಶವಂತಪುರ ಕ್ಷೇತ್ರದ ಶಾಸಕರಾಗಿರುವ ಎಸ್.ಟಿ.ಸೋಮಶೇಖರ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಪ್ರಬಲ ಅಭ್ಯರ್ಥಿಗಳು ಸಿಗದಿರುವ ಹಿನ್ನೆಲೆಯಲ್ಲಿ ಎಸ್.ಟಿ.ಸೋಮಶೇಖರ್ರವರನ್ನೇ ಅಭ್ಯರ್ಥಿ ಮಾಡಲು ಪಕ್ಷದ ವಲಯದಲ್ಲಿ ಚಿಂತನ ಮಂಥನ ನಡೆದಿದೆ.
|
5 |
+
ಮಹಾರಾಷ್ಟ್ರ ಕಾಂಗ್ರೆಸ್ಗೆ ಮತ್ತೊಂದು ಶಾಕ್ : ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ್ ರಾಜೀನಾಮೆ
|
6 |
+
ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶಿವರಾಂ ಹೆಬ್ಬಾರ್ ಕೂಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಇಲ್ಲಿ ಕೂಡ ಕಾಂಗ್ರೆಸ್ಗೆ ಪ್ರಬಲ ಅಭ್ಯರ್ಥಿಗಳು ಇಲ್ಲದಿರುವ ಕಾರಣ ಕಾಂಗ್ರೆಸ್ ಅವರನ್ನೇ ಹುರಿಯಾಳನ್ನಾಗಿಸುವ ಚಿಂತನೆಯಲ್ಲಿದೆ. ಹೆಬ್ಬಾರ್ ಕೂಡ ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದು, ಉತ್ತರ ಕನ್ನಡ ಜಿಲ್ಲೆಯಿಂದ ತಮ್ಮನ್ನು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಮಾಡಿದರೆ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ.
|
7 |
+
ಕೇರಳದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ
|
8 |
+
ಇದಕ್ಕೆ ಬಹುತೇಕ ಕೆಪಿಸಿಸಿ ನಾಯಕರು ಸಮ್ಮತಿ ನೀಡಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.ಈ ಹಿಂದೆ ಕ��ಂಗ್ರೆಸ್ನಲ್ಲಿದ್ದ ಶಿವರಾಂ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ವ್ಹಿಪ್ ಅನ್ವಯವಾಗುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಈ ಇಬ್ಬರೂ ರಾಜೀನಾಮೆ ನೀಡಲಿದ್ದಾರೆಯೇ ಎಂಬುದು ಯಕ್ಷಪ್ರಶ್ನೆಯಾಗಿದೆ.
|
eesanje/url_46_222_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಎಸ್ಟಿಎಸ್ ವಿರುದ್ಧ ಹೆಚ್ಡಿಕೆ ಟೀಕೆ: ಸ್ಥಳದಿಂದ ಕಾಲ್ಕಿತ್ತ ಅಶೋಕ್, ಬೊಮ್ಮಾಯಿ
|
2 |
+
ಬೆಂಗಳೂರು,ಫೆ.27- ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ ನಡೆಸುತ್ತಿದ್ದಂತೆ ಅಕ್ಕಪಕ್ಕ ನಿಂತಿದ್ದ ಬಸವರಾಜ ಬೊಮ್ಮಾಯಿ ಮತ್ತು ಆರ್.ಅಶೋಕ್ ಸದ್ದಿಲ್ಲದಂತೆ ಜಾಗ ಖಾಲಿ ಮಾಡಿದ ಪ್ರಸಂಗ ನಡೆಯಿತು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ರೊಂದಿಗೆ ಕುಮಾರಸ್ವಾಮಿಯವರು ರಾಜ್ಯಸಭೆ ಚುನಾವಣೆಯ ಮತಗಟ್ಟೆಯ ಸುತ್ತಮುತ್ತ ಓಡಾಡುತ್ತಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು.
|
3 |
+
ಸುದ್ದಿಗಾರರೊಂದಿಗೆ ಮಾತನಾಡಲು ಆರ್.ಅಶೋಕ್, ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ಅವರ ಬೆನ್ನ ಹಿಂದೆಯೇ ಕುಮಾರಸ್ವಾಮಿ ಯವರು ಬಂದರು. ಬಿಜೆಪಿ ಶಾಸಕರಾದ ಶಿವರಾಂ ಹೆಬ್ಬಾರ್, ಎಸ್.ಟಿ.ಸೋಮಶೇಖರ್ರವರು ಮತ ಹಾಕಲು ಬರದೇ ಇದ್ದವರ ಬಗ್ಗೆ ಪ್ರಶ್ನೆಗಳು ಎದುರಾದವು. ಅದಕ್ಕೆ ಉತ್ತರಿಸಿದ ಆರ್.ಅಶೋಕ್, ಶಿವರಾಂ ಹೆಬ್ಬಾರ್ ತಮ್ಮೊಂದಿಗೆ ಚರ್ಚೆ ಮಾಡಿದ್ದು, 10.30 ಸುಮಾರಿಗೆ ಆಗಮಿಸಿ ಮತ ಚಲಾಯಿಸುವುದಾಗಿ ತಿಳಿಸಿದ್ದಾರೆ. ಎಸ್.ಟಿ.ಸೋಮಶೇಖರ್ರವರೊಂದಿಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಹೇಳಿದರು.
|
4 |
+
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್
|
5 |
+
ಎಸ್.ಟಿ.ಸೋಮಶೇಖರ್ರವರು ಈಗಾಗಲೇ ಹೇಳಿಕೆ ನೀಡಿದ್ದು, ಅಭಿವೃದ್ಧಿಗೆ ನನ್ನ ಮತ ಎಂದಿದ್ದಾರೆ ಎಂಬಉಪಪ್ರಶ್ನೆ ಎದುರಾದಾಗ ಬಸವರಾಜ ಬೊಮ್ಮಾಯಿಯವರು, ಈ ಹಿಂದೆ ಎಸ್.ಟಿ.ಸೋಮಶೇಖರ್ ಅವರ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಲಾಗಿದೆ. ಅಭಿವೃದ್ಧಿಯೂ ಆಗಿದೆ ಎಂದು ಸಮರ್ಥನೆ ನೀಡಿದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಕುಮಾರಸ್ವಾಮಿಯವರು, ಬಿಜೆಪಿ ಸರ್ಕಾರದಲ್ಲಿ ಎಸ್.ಟಿ.ಸೋಮಶೇಖರ್ 3 ವರ್ಷ ಸಚಿವರಾಗಿ ಕೆಲಸ ಮಾಡಿದ್ದಾರೆ.ಕಾಂಗ್ರೆಸ್ನಿಂದ ಬಿಜೆಪಿಗೆ ಹೋಗುವಾಗ ಅಭಿವೃದ್ಧಿ ಕಾರಣಕ್ಕಾಗಿ ಪಕ್ಷಾಂತರ ಮಾಡುತ್ತಿರುವುದಾಗಿ ಹೇಳಿದರು.
|
6 |
+
ಬಿಜೆಪಿ ಆಡಳಿತದಲ್ಲಿ ಯಥೇಚ್ಚವಾಗಿ ಅನುದಾನ ಪಡೆದಿದ್ದಾರೆ. ಇದರಿಂದ ವೈಯಕ್ತಿಕವಾಗಿ ಅವರ ಅಭಿವೃದ್ಧಿಯಾಗಿದೆ, ಕ್ಷೇತ್ರದ ಅಭಿವೃದ್ಧಿ ಆಗಿಲ್ಲ ಎಂದು ಕಂಡುಬರುತ್ತಿದೆ ಎಂದು ವಾಗ್ದಾಳಿ ನಡೆಸಿದರು.ಬಿಜೆಪಿ ಶಾಸಕರ ಬಗ್ಗೆ ಕುಮಾರಸ್ವಾಮಿಯವರ ಟೀಕಾ ಪ್ರಹಾರ ಬಸವರಾಜ ಬೊಮ್ಮಾಯಿ ಮತ್ತು ಅಶೋಕ್ರಿಗೆ ಇರಿಸು ಮುರಿಸು ಉಂಟು ಮಾಡಿತು. ತಕ್ಷಣವೇ ಅವರು ಅಲ್ಲಿಂದ ನಿರ್ಗಮಿಸಿದರು.
|
eesanje/url_46_223_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಧಮ್ಕಿ, ಬೆದರಿಸುವುದು ಕಾಂಗ್ರೆಸ್ನವರ ಅಭ್ಯಾಸ: ಕುಮಾರಸ್ವಾಮಿ
|
2 |
+
ಬೆಂಗಳೂರು,ಫೆ.27- ರಾಜ್ಯಸಭೆ ಚುನಾವಣೆಯಲ್ಲಿ ಸೋಲು-ಗೆಲುವಿಗಿಂತಲೂ ಮುಖ್ಯವಾಗಿ ನಮ್ಮ ಪಕ್ಷದ ಶಾಸಕರ ನಿಷ್ಠೆ ಮತ್ತು ಪ್ರಾಮಾಣಿಕತೆಯ ಸಾಬೀತಿಗಾಗಿ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾಗಿ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
|
3 |
+
ವಿಧಾನಸೌಧದಲ್ಲಿಂದು ರಾಜ್ಯಸಭೆ ಚುನಾವಣೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಚನೆಯಾದ ಆರಂಭದಲ್ಲೇ ಜೆಡಿಎಸ್ನಿಂದ 12 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಚರ್ಚೆ ಮಾಡುತ್ತಿದ್ದರು. ನೀವು 13ನೇಯವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಎಂದು ನಮ್ಮ ಶಾಸಕರಿಗೆ ಕರೆ ಮಾಡಲಾಗುತ್ತಿತ್ತು. ಕೆಲವರಿಗೆ ಅಭಿವೃದ್ಧಿಗೆ ಹಣ ನೀಡುತ್ತೇವೆ ಎಂಬ ಆಮಿಷವನ್ನು ಒಡ್ಡಿದ್ದರು. ಅದರಲ್ಲಿ ಕಾಂಗ್ರೆಸ್ಸಿಗರು ಎಷ್ಟು ಯಶಸ್ವಿಯಾಗಿದ್ದಾರೆ ಎಂಬುದನ್ನು ಪರಿಶೀಲಿಸಲು ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ರಾಜ್ಯಸಭೆ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿಯವರನ್ನು ಕಣಕ್ಕಿಳಿಸಲಾಗಿದೆ ಎಂದರು.
|
4 |
+
ಇಲ್ಲಿ ಸೋಲು-ಗೆಲುವಿನ ಪ್ರಶ್ನೆಯಿಲ್ಲ. ಬಿಜೆಪಿ-ಜೆಡಿಎಸ್ನ ಮೈತ್ರಿಯ ಬಳಿಕ ಇದು ಎರಡನೇ ಸೋಲು ಎಂಬ ವ್ಯಾಖ್ಯಾನವೂ ಸರಿ ಇಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಬೇರೆ ರೀತಿಯ ಕಾರಣಗಳಿವೆ. ಬೆಳ್ಳಿ ಬಟ್ಟಲು ಹಂಚಿದ್ದಾರೆ. ಜೊತೆಗೆ ಶಿಕ್ಷಕರ ಕ್ಷೇತ್ರದ ಮತದಾರರಲ್ಲಿ ಅನುದಾನಿತ ಶಾಲೆಗಳ ಪ್ರಮಾಣ ಹೆಚ್ಚಿತ್ತು. ಅವರನ್ನು ಹೆದರಿಸಿ ಬ್ಲಾಕ್ಮೇಲ್ ಮಾಡುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದರು.
|
5 |
+
ಕುಟುಂಬ ಎಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಸಹಜ. ಆದರೆ ಜೆಡಿಎಸ್ನ 19 ಶಾಸಕರು ಒಟ್ಟಾಗಿದ್ದಾರೆ. ಶರಣಗೌಡ ಕಂದಕೂರ್, ಕರೆಮ್ಮ ಸೇರಿದಂತೆ ನಮ್ಮ ಪಕ್ಷದ ಎಲ್ಲಾ ಶಾಸಕರು ಒಂದು ಕುಟುಂಬವಾಗಿ ಒಟ್ಟಾಗಿದ್ದೇವೆ. ಇದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಸ್ಪಷ್ಟಪಡಿಸಿದರು.
|
6 |
+
ಕಾಂಗ್ರೆಸ್ ಶಾಸಕರಿಗೆ ಧಮ್ಕಿ ಹಾಕಿ ಬೆದರಿಸಿ ಮತ ಕೇಳಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಮ್ಮದು ಆ ಸಂಸೃತಿ ಅಲ್ಲ. ಧಮ್ಕಿ ಹಾಕುವುದು, ಬೆದರಿಸುವುದು ಕಾಂಗ್ರೆಸ್ನವರ ಅಭ್ಯಾಸಗಳು ಎಂದು ತಿರುಗೇಟು ನೀಡಿದರು.
|
eesanje/url_46_223_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಫೆ.29ಕ್ಕೆ ಬಿಜೆಪಿ ಮೊದಲ ಪಟ್ಟಿ: ರಾಜ್ಯದ 10 ಕ್ಷೇತ್ರ ಸೇರಿ 150 ಅಭ್ಯರ್ಥಿಗಳು ಫೈನಲ್
|
2 |
+
ಬೆಂಗಳೂರು,ಫೆ.26- ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಅಧಮ್ಯ ವಿಶ್ವಾಸದಲ್ಲಿದ್ದು, ಇದೇ ತಿಂಗಳ 29ರಂದು ಪ್ರಕಟಗೊಳ್ಳಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಾಜ್ಯದ 10ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್ ಘೋಷಣೆ ಮಾಡಲಿದೆ.ಇದೇ ತಿಂಗಳ 29ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂದು ಪಕ್ಷವು ಸುಮಾರು 150ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
|
3 |
+
ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಸೇರಿದಂತೆ ಅಂದಾಜು 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಹಾಲಿ 10ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ.
|
4 |
+
ಶಿವಮೊಗ್ಗ-ಬಿ.ವೈ.ರಾಘವೇಂದ್ರ, ಮೈಸೂರು-ಕೊಡುಗು- ಪ್ರತಾಪ್ ಸಿಂಹ, ಚಿತ್ರದುರ್ಗ- ಎ.ನಾರಾಯಣಸ್ವಾಮಿ, ಡಾ.ಉಮೇಶ್ ಜಾಧವ್-ಕಲಬುರಗಿ, ಪ್ರಹ್ಲಾದ್ ಜೋಷಿ-ಧಾರವಾಡ, ಬಿ.ಶ್ರೀರಾಮುಲು -ಬಳ್ಳಾರಿ, ಅಮರೇಶ್ ನಾಯಕ್-ರಾಯಚೂರು, ಉತ್ತರಕನ್ನಡ-ಅನಂತಕುಮಾರ್ ಹೆಗಡೆ, ದಕ್ಷಿಣ ಕನ್ನಡ -ನಳೀನ್ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು-ಶೋಭಾ ಕರಂದ್ಲಾಜೆ, ಚಿಕ್ಕೋಡಿ-ಅಣ್ಣಾ ಸಾಹೇಬ್ ಜೊಲ್ಲೆ ಅವರುಗಳಿಗೆ ಟಿಕೆಟ್ ಮೊದಲ ಪಟ್ಟಿಯಲ್ಲೇ ಘೋಷಣೆಯಾಗುವ ಸಂಭವವಿದೆ.
|
5 |
+
ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಯುವಕ ಸಾವು..
|
6 |
+
ತೀವ್ರ ಜಿದ್ದಾಜಿದ್ದಿನಿಂದ ಕೂಡಿರುವ ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಉತ್ತರ, ಚಾಮರಾಜನಗರ, ತುಮಕೂರು, ದಾವಣಗೆರೆ, ಕೊಪ್ಪಳ, ಹಾವೇರಿ, ಬೆಳಗಾವಿ, ಬೀದರ್, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಟಿಕೆಟ್ ಘೋಷಣೆಯಾಗುವ ಸಂಭವವಿದೆ.
|
7 |
+
ಜೆಡಿಎಸ್ಗೆ ಯಾವ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದರ ನಂತರ ಉಳಿದ ಕ್ಷೇತ್ರಗಳಿಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಿ ಬಿಜೆಪಿ ವರಿಷ್ಠರು ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. 29ರಂದು ನಡೆಯಲಿರುವ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರುಗಳು ಭಾಗವಹಿಸಲಿದ್ದಾರೆ.
|
eesanje/url_46_223_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಟೈರ್ ಸ್ಪೋಟಗೊಂಡು ಬೊಲೇರೊ ಪಲ್ಟಿ : ಮೂವರು ದಾರುಣ ಸಾವು
|
2 |
+
ದಾವಣಗೆರೆ,ಫೆ.26- ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೇರೊ ಟೆಂಪೊ ವಾಹನ ಹೋಗುತ್ತಿದ್ದಾಗ ಏಕಾಏಕಿ ಟೈರ್ ಸ್ಪೋಟಗೊಂಡು ವಾಹನ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಬಳಿ ತಡರಾತ್ರಿ ಸಂಭವಿಸಿದೆ. ಮೃತಪಟ್ಟವರನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಮಂತ್ರಾಲಯಂ ತಾಲ್ಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಸದ್ಯಕ್ಕೆ ಇವರ ಹೆಸರು ತಿಳಿದುಬಂದಿಲ್ಲ.
|
3 |
+
ಘಟನೆಯಲ್ಲಿ ಗಾಯಗೊಂಡಿರುವ ಐದು ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಚಿಂತಾಜನಕವಾಗಿರುವ ಮತ್ತೊಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಭತ್ತು ಮಂದಿ ಬೊಲೇರೊ ಟೆಂಪೊ ವಾಹನದಲ್ಲಿ ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿನಕಾಯಿಯನ್ನು ತೆಗೆದುಕೊಂಡು ತಮ್ಮೂರಿಗೆ ವಾಪಸ್ ಆಗುತ್ತಿದ್ದರು.
|
4 |
+
ಮಳೆ, ಬೆಳೆ ಜೊತೆ ಕಮಲ ಅರಳಲಿದೆ: ಮೈಲಾರ ಲಿಂಗೇಶ್ವರ ಭವಿಷ್ಯ..
|
5 |
+
ದಾವಣಗೆರೆ ನಗರ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರ ಪಂಜಾಬಿ ಡಾಬಾ ಬಳಿ ರಾತ್ರಿ 11.30 ರ ಸುಮಾರಿನಲ್ಲಿ ಏಕಾಏಕಿ ವಾಹನದ ಟೈರ್ ಸ್ಪೋಟಗೊಂಡು ಉರುಳಿಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_223_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರೌಡಿ ಶೀಟರ್ ಸೈನೆಡ್ ಜಾವೆದ್ ಬಂಧನ
|
2 |
+
ಮೈಸೂರು,ಫೆ.26- ನಗರದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾರಕಾಸ್ತ್ರಗಳ ಸಮೇತ ರೌಡಿ ಶೀಟರ್ ಒಬ್ಬನನ್ನು ಬಂಧಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರು ನಗರದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಲಷ್ಕರ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿರುವ ಜಾವೆದ್ ಖಾನ್ ಅಲಿಯಾಸ್ ಸೈನೆಡ್ ಜಾವೆದ್ (42) ಬಂತ ರೌಡಿ ಶೀಟರ್.
|
3 |
+
ಈತನ ಮೇಲೆ ಈಗಾಗಲೇ ಹಲವು ಪ್ರಕರಣಗಳಿದ್ದರೂ ಮತ್ತೊಂದು ಕೃತ್ಯಕ್ಕೆ ಸಂಚು ಹಾಕುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ಮಾಡಿ ಸೆರೆ ಹಿಡಿದರು. ಸಿಕ್ಕಿಬಿದ್ದ ವೇಳೆ ಜಾವೇದ್ ಖಾನ್ ಬಳಿ ವಿವಿಧ ನಮೂನೆಯ ಮೂರು ಡ್ರಾಗರ್ಗಳು ದೊರೆತಿದೆ. ನಂಬರ್ ಪ್ಲೇಟ್ ಇಲ್ಲದ ಸುಜುಕಿ ಆಕ್ಸಿಸ್ನಲ್ಲಿ ಡ್ರಾಗರ್ಗಳನ್ನು ಇಟ್ಟುಕೊಂಡಿದ್ದ ವೇಳೆ ರೆಡ್ ಹ್ಯಾಂಡಾಗಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
|
4 |
+
ಠಾಣೆಗೆ ಕರೆಸಿ ಎಚ್ಚರಿಕೆ ಕೊಡುವ ಬದಲು ರೌಡಿಶೀಟರ್ಗಳು ಇರುವ ಸ್ಥಳವನ್ನೇ ಹುಡುಕಿಕೊಂಡು ಹೋಗಿ ಪರಿಶೀಲನೆ ಮಾಡುವ ಜವಾಬ್ದಾರಿಯನ್ನು ಸಿಸಿಬಿ ಪೊಲೀಸರಿಗೆ ನೀಡಲಾಗಿದೆ. ಫೆ.23 ರ ರಾತ್ರಿ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಉನ್ನತಿ ನಗರದಲ್ಲಿ ಇನ್ಸ್ಪೆಕ್ಟರ್ ಪೂವಯ್ಯ ಮತ್ತು ಟೀಂ ರೌಂಡ್ಸ್ ಮಾಡುತ್ತಿದ್ದ ವೇಳೆ ಜಾವೆದ್ ಖಾನ್ ಮಾರಕಾಸ್ತ್ರಗಳ ಸಮೇತ ಸಿಕ್ಕಿ ಬಿದ್ದಿದ್ದಾನೆ.
|
5 |
+
ಮಳೆ, ಬೆಳೆ ಜೊತೆ ಕಮಲ ಅರಳಲಿದೆ: ಮೈಲಾರ ಲಿಂಗೇಶ್ವರ ಭವಿಷ್ಯ..
|
6 |
+
2019 ರಲ್ಲಿ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾವೆದ್ ಖಾನ್ ಪಿಸ್ತೂಲ್ ಮಾರಾಟ ಮಾಡುವ ಯತ್ನದಲ್ಲಿ ವೇಳೆ ಸಿಸಿಬಿ ತಂಡಕ್ಕೆ ಸಿಕ್ಕಿ ಬಿದ್ದಿದ್ದ. ಬೆಂಗಳೂರು ಸಿಸಿಬಿ ಪೊಲೀಸರು ಜಾವೆದ್ ಖಾನ್ ಸೇರಿದಂತೆ 6 ಮಂದಿಯನ್ನು ಬಂಧಿಸಿದ್ದರು. ಆರೋಪಿಗಳಿಂದ ಮೂರು ಪಿಸ್ತೂಲ, ಒಂದು ರಿವಾಲ್ವರ್ ಹಾಗೂ 8 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದರು. ಸದ್ಯ ಈ ಪ್ರಕರಣದಲ್ಲಿ ಜಾವೆದ್ ಆರೋಪಿಯಾಗೇ ಇದ್ದಾನೆ. ಅಲ್ಲದೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 307 ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ಈತನ ಮೇಲಿದೆ. ಇದೀಗ ಜಾವೇದ್ ಖಾನ್ ಎನ್.ಆರ್.ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ.
|
7 |
+
ನಗರ ಪೊಲೀಸ್ ಆಯುಕ್ತರಾದ ಡಾ.ಬಿ.ರಮೇಶ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್, ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಪೂವಯ್ಯ ನೇತೃತ್ವದಲ್ಲಿ ಪಿಎಸ್ಐ ರಾಜು ಕೊನಕೇರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಜಾವೇದ್ ಖಾನ್ನನ್ನು ಬಂಸುವಲ್ಲಿ ಯಶಸ್ವಿಯಾಗಿದ್ದಾರೆ.
|
eesanje/url_46_223_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಜೆಡಿಎಸ್ನವರಿಗೆ ಆತ್ಮವೇ ಇಲ್ಲ: ಸಿಎಂ ಸಿದ್ದರಾಮಯ್ಯ ಲೇವಡಿ
|
2 |
+
ಬೆಂಗಳೂರು,ಫೆ.27- ಜೆಡಿಎಸ್ನವರಿಗೆ ಆತ್ಮವೇ ಇಲ್ಲ. ಇನ್ನು ಆತ್ಮಸಾಕ್ಷಿಯ ಮತ ಎಲ್ಲಿಂದ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನವರು ತಮ್ಮ ಗೆಲುವಿಗಾಗಿ ಬೇರೆ ಬೇರೆ ಪ್ರಯತ್ನ ಮಾಡಿದರು. ಆದರೆ ಅದರಲ್ಲಿ ಅವರು ಯಶಸ್ವಿಯಾಗುವುದಿಲ್ಲ ಎಂದರು.
|
3 |
+
ಎಲ್ಲರೂ ತಾವು ಗೆಲ್ಲುವುದಕ್ಕಾಗಿಯೇ ಸ್ರ್ಪಧಿಸುತ್ತೇವೆ ಎನ್ನುತ್ತಾರೆ, ಸೋಲುತ್ತೇವೆ ಎಂದು ಯಾರೂ ಹೇಳುವುದಿಲ್ಲ. ಜೆಡಿಎಸ್ಗೆ ಅಗತ್ಯ ಸಂಖ್ಯಾಬಲದಷ್ಟು ಮತಗಳು ಇರಲಿಲ್ಲ. ಹೀಗಾಗಿ ಅಭ್ಯರ್ಥಿಯನ್ನು ಅವರು ಕಣಕ್ಕಿಳಿಸುವುದು ಅಗತ್ಯವಿರಲಿಲ್ಲ. ಆದರೂ ಸ್ಪರ್ಧೆ ಮಾಡಿದ್ದಾರೆ ಎಂದು ಹೇಳಿದರು.
|
4 |
+
ಪರೀಕ್ಷೆಗಳಿಗೆ ತೆರಳುತ್ತಿದ್ದಾಗ ಅಪಘಾತ: 4 ವಿದ್ಯಾರ್ಥಿಗಳ ಸಾವು
|
5 |
+
ನಮ್ಮ ಪಕ್ಷದ ಎಲ್ಲಾ ಶಾಸಕರೂ ಪಕ್ಷನಿಷ್ಠರಾಗಿದ್ದಾರೆ. ಹೋಟೆಲ್ನಿಂದ ನೇರವಾಗಿ ಇಲ್ಲಿಗೆ ಬಂದು ಮತ ಹಾಕಿದ್ದಾರೆ. ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರಿಂದಾಗಿ ಚುನಾವಣೆ ನಡೆಯಬೇಕಾದ ಪರಿಸ್ಥಿತಿ ಎದುರಾಯಿತು ಎಂದು ಮುಖ್ಯಮಂತ್ರಿ ತಿಳಿಸಿದರು. ತಮ್ಮ ಅಭ್ಯರ್ಥಿಗೆ ಆತ್ಮಸಾಕ್ಷಿ ಮತ ದೊರೆಯುತ್ತವೆ ಎಂದು ಜೆಡಿಎಸ್ ನಾಯಕರು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಜೆಡಿಎಸ್ನವರಿಗೆ ಆತ್ಮವೇ ಇಲ್ಲ, ಇನ್ನು ಸಾಕ್ಷಿ ಎಲ್ಲಿಂದ ಬರಬೇಕು? ಜಾತ್ಯತೀತ ಎಂದು ಹೆಸರಿಟ್ಟುಕೊಂಡು ಈಗ ಯಾರ ಜೊತೆ ಸೇರಿದ್ದಾರೆ? ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಅವರಿಗೆ ಆತ್ಮ ಎಲ್ಲಿದೆ ಎಂದು ಪ್ರಶ್ನಿಸಿದರು.
|
6 |
+
ಕಾಂಗ್ರೆಸ್ಗೆ ರಾಜ್ಯಸಭೆ ಚುನಾವಣೆಯಲ್ಲಿ 3 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವಷ್ಟು ಸಂಖ್ಯಾಬಲ ಇದೆ. ಹೀಗಾಗಿ ಬೇರೆ ಪಕ್ಷದವರಿಗೆ ಆಸೆ, ಆಮಿಷ ತೋರಿಸಿ ಸೆಳೆದುಕೊಳ್ಳುವ ಅಗತ್ಯ ಇಲ್ಲ. 134 ಶಾಸಕರು , ಒಂದು ಸ್ವತಂತ್ರ ಒಳಗೊಂಡಂತೆ 135 ಸಂಖ್ಯಾಬಲವಿದೆ. ಅದರ ಜೊತೆಗೆ ಪಕ್ಷೇತರರಾದ ಲತಾ ಮಲ್ಲಿಕಾರ್ಜುನ್, ಪುಟ್ಟಸ್ವಾಮಿಗೌಡ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಜನಾರ್ದನ ರೆಡ್ಡಿ ಕೂಡ ನಮಗೆ ಮತ ಹಾಕುತ್ತಿದ್ದಾರೆ. ಜೆಡಿಎಸ್ ಅಥವಾ ಬಿಜೆಪಿಯ ಶಾಸಕರಿಗೆ ಆಮಿಷವೊಡ್ಡುವ ಅಗತ್ಯ ನಮಗಿಲ್ಲ ಎಂದು ಹೇಳಿದರು.
|
7 |
+
ಕಾಂಗ್ರೆಸ್ ಶಾಸಕರಿಂದ ಅಡ್ಡಮತದಾನವಾಗಲಿದೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಬಿಜೆಪಿಯವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ ಎಂದು ತಿರುಗೇಟು ನೀಡಿದರು.
|
eesanje/url_46_223_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆಗೆ ಮೈಸೂರಿನಿಂದ 26.55 ಲಕ್ಷ ಅಳಿಸಲಾಗದ ಶಾಯಿ ಪೂರೈಕೆ
|
2 |
+
ಮೈಸೂರು,ಫೆ.27- ಈ ಬಾರಿಯ ಲೋಕಸಭಾ ಚುನಾವಣೆಗೆ ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಸುಮಾರು 26.55 ಲಕ್ಷ ಅಳಿಸಲಾಗದ ಶಾಯಿ ಪೂರೈಕೆ ಮಾಡಲಿದೆ. ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಅಳಿಸಲಾಗದ ಶಾಯಿ ತಯಾರಿಸುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಗೆ 10 ಎಂಎಲ್ ಪ್ರಮಾಣದ 26.55 ಲಕ್ಷ ಅಳಿಸಲಾಗದ ಶಾಯಿ ಬಾಟಲು ಪೂರೈಕೆ ಮಾಡುತ್ತಿದೆ.
|
3 |
+
10 ಎಂಎಲ್ ಬಾಟಲಿಯಿಂದ 700 ಮತದಾರರ ಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಬಹುದು. ಮಾರ್ಚ್ 15ರೊಳಗೆ ದೇಶದ ಎಲ್ಲಾ ರಾಜ್ಯಗಳ ಚುನಾವಣಾ ಆಯುಕ್ತರ ಕಚೇರಿಗಳ ಬೇಡಿಕೆಗೆ ಅನುಗುಣವಾಗಿ ಅಳಿಸಲಾಗದ ಶಾಯಿ ಪೂರೈಕೆ ಮಾಡುವಂತೆ ಆದೇಶ ನೀಡಲಾಗಿದೆ.
|
4 |
+
ಪರೀಕ್ಷೆಗಳಿಗೆ ತೆರಳುತ್ತಿದ್ದಾಗ ಅಪಘಾತ: 4 ವಿದ್ಯಾರ್ಥಿಗಳ ಸಾವು
|
5 |
+
ಈಗಾಗಲೇ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಗೋವಾ, ಅರುಣಾಚಲ ಪ್ರದೇಶ, ತ್ರಿಪುರ, ನಾಗಲ್ಯಾಂಡ್, ಮಿಜೋರಾಂ ರಾಜ್ಯಗಳಿಗೆ ಮೈಲ್ಯಾಕ್ ಆಡಳಿತ ವರ್ಗ ಅಳಿಸಲಾಗದ ಶಾಯಿಯನ್ನ ಪೂರೈಕೆ ಮಾಡಿದೆ. ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ವಿಶ್ವದ 30ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಅಳಿಸಲಾಗದ ಶಾಯಿಯನ್ನ ಪೂರೈಕೆ ಮಾಡುತ್ತಿದ್ದು ಇದು ಸಾಂಸ್ಕøತಿಕ ನಗರಿಯ ಹೆಮ್ಮೆ.
|
6 |
+
ಭಾರತೀಯ ಚುನಾವಣಾ ಆಯೋಗ ಕಳೆದ ಡಿಸೆಂಬರ್ ನಲ್ಲೇ ಅಳಿಸಲಾಗದ ಶಾಯಿ ಪೂರೈಕೆಗೆ ಬೇಡಿಕೆ ಇಟ್ಟಿತ್ತು. 26.55 ಲಕ್ಷ ಅಳಿಸಲಾಗದ ಶಾಯಿ ಬಾಟಲುಗಳ ಪೂರೈಕೆಯಿಂದ ಮೈಲ್ಯಾಕ್ 55 ಕೋಟಿ ವಹಿವಾಟು ಮಾಡುತ್ತಿದೆ.1937ರಲ್ಲಿ ಅಂದಿನ ಮೈಸೂರು ರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದರ್ಶಿತ್ವದ ಫಲವಾಗಿ ಮೈಲ್ಯಾಕ್ ತಲೆ ಎತ್ತಿತು.
|
7 |
+
8 ಶಾಸಕರನ್ನು ಅನರ್ಹಗೊಳಿಸಿದ ಆಂಧ್ರ ಸ್ಪೀಕರ್
|
8 |
+
ಸ್ವಾತಂತ್ರ್ಯ ನಂತರ ಮೈಸೂರು ಸರ್ಕಾರದ ಅೀಧಿನಕ್ಕೆ ಒಳಪಟ್ಟ ಮೈಲ್ಯಾಕ್ ನಂತರ ಮೈಸೂರು ಲ್ಯಾಕ್ ಅಂಡ್ ಪೇಂಟ್ಸ್ ಲಿಮಿಟೆಡ್ ಎಂದು ಮರು ನಾಮಕರಣಗೊಂಡಿತು. ಬಳಿಕ 1989 ರಿಂದ ವಾರ್ನಿಷ್ ಉತ್ಪಾದನೆ ಆರಂಭಿಸಿತು,ತದನಂತರ ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಎಂದು ಮರು ನಾಮಕರಣ ಮಾಡಲಾಯಿತು.
|
eesanje/url_46_223_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನನಗೆ ಬಿಜೆಪಿ ಟಿಕೆಟ್ ಸಿಕ್ಕೇ ಸಿಗುತ್ತದೆ: ಸುಮಲತಾ ಅಂಬರೀಶ್
|
2 |
+
ಮಂಡ್ಯ,ಫೆ.26- ನನಗೆ ಬಿಜೆಪಿ ಟಿಕೆಟ್ ಸಿಕ್ಕೇ ಸಿಗುತ್ತದೆ, ಅದರಲ್ಲಿ ಅನುಮಾನವಿಲ್ಲ. ಆದರೆ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ನನ್ನ ಹೋರಾಟ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿ ಮೈತ್ರಿಯಾದ ತಕ್ಷಣ ನನ್ನ ಜೊತೆ ಶತ್ರುತ್ವ ಬೆಳೆಯಬೇಕು ಎಂದೇನೂ ಇಲ್ಲ. ಜೆಡಿಎಸ್ ಈಗ ಎನ್ಡಿಎ ಭಾಗವಾಗಿದೆ. ನಾನೂ ಕೂಡ ಎನ್ಡಿಎ ಭಾಗವಾಗಿದ್ದೇನೆ ಎಂದರು.
|
3 |
+
ನಿನ್ನೆ ನಡೆದ ಸಭೆಯಲ್ಲಿ ಬಹಳಷ್ಟು ಮಂದಿ ನೀವು ಮಂಡ್ಯ ಬಿಟ್ಟು ಹೋಗಬೇಡಿ, ನಾವು ನಿಮ್ಮನ್ನು ನಂಬಿಕೊಂಡಿದ್ದೇವೆ ಎಂದು ಹೇಳಿದ್ದಾರೆ. ಬಿಜೆಪಿ ನನಗೆ ಟಿಕೆಟ್ ನೀಡುವುದು ಖಚಿತ. ಮಂಡ್ಯ ಕ್ಷೇತ್ರದಲ್ಲೇ ಬಿಜೆಪಿ ಟಿಕೆಟ್ ಸಿಗಬೇಕು ಎನ್ನುವುದು ನನ್ನ ಆಶಯ. ಈ ಬಗ್ಗೆ ಹೈಕಮಾಂಡ್ ನಾಯಕರಿಗೂ ನಾನು ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಹೇಳಿದರು.
|
4 |
+
ಕನ್ನಡ ಕಡ್ಡಾಯ ನಾಮಫಲಕ ಅಳವಡಿಕೆಗೆ ಎರಡೇ ದಿನ ಬಾಕಿ
|
5 |
+
ಕಳೆದ ಒಂದು ವರ್ಷದಿಂದಲೂ ಸಂಸದೆಯಾಗಿ ನಾನು ಬಿಜೆಪಿಗೆ ಸಂಸತ್ನಲ್ಲಿ ಎಲ್ಲಾ ಹಂತದಲ್ಲೂ ಬೆಂಬಲ ನೀಡಿದ್ದೇನೆ. ವಿಧಾನಸಭೆ ಚುನಾವಣೆಯಲ್ಲೂ ಬಾಹ್ಯ ಬೆಂಬಲ ವ್ಯಕ್ತಪಡಿಸಿದ್ದೇನೆ. ಜನರ ಅಭಿಪ್ರಾಯ ಕೂಡ ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡರೆ ಪಕ್ಷ ಸಂಘಟನೆ ಬಲಗೊಳ್ಳುತ್ತದೆ ಎಂಬುದಾಗಿದೆ ಎಂದರು.ನನಗೆ ಬಿಜೆಪಿ ಟಿಕೆಟ್ ಸಿಕ್ಕರೆ ಜೆಡಿಎಸ್ನವರು ಮೈತ್ರಿ ಧರ್ಮದ ಭಾಗವಾಗಿ ನನಗೆ ಬೆಂಬಲ ನೀಡಿಯೇ ನೀಡುತ್ತಾರೆ. ನಾನು ಕೂಡ ಅವರ ಬೆಂಬಲ ಕೇಳುತ್ತೇನೆ ಎಂದು ಹೇಳಿದರು.
|
6 |
+
ಬೇರೆ ಕ್ಷೇತ್ರದಲ್ಲಿದ್ದಂತೆ ಮಂಡ್ಯದಲ್ಲಿ ಬಿಜೆಪಿ ಸಂಘಟನೆ ಪ್ರಬಲವಾಗಿಲ್ಲ. ಈ ಎಲ್ಲಾ ಅಂಶಗಳನ್ನೂ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಜೆಡಿಎಸ್ನವರು ತಮ್ಮ ಸಂಘಟನಾ ದೃಷ್ಟಿಯಿಂದ ಯೋಚಿಸುವುದು ಸಹಜ. ಹಿರಿಯ ನಾಯಕರು ತಮ್ಮ ಅನುಭವದ ಆಧಾರದ ಮೇಲೆ ಎಲ್ಲವನ್ನೂ ಚರ್ಚಿಸಿ ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
|
7 |
+
ಹೊಸ ಸಂಸತ್ನಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಬಿಜೆಪಿ ಸರ್ಕಾರ ಅಂಗೀಕರಿಸಿದೆ. ಹೀಗಾಗಿ ಎಲ್ಲೆಲ್ಲಿ ಅವಕಾಶ ಲಭ್ಯವಿದೆಯೋ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡಲು ವರಿಷ್ಠರು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನನಗೆ ಅವಕಾಶ ಸಿಗಲಿದೆ ಎಂದು ಹೇಳಿದರು.
|
eesanje/url_46_223_5.txt
ADDED
@@ -0,0 +1,20 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜಾ ವೆಂಕಟಪ್ಪ ನಾಯಕಗೆ ಉಭಯ ಸದನಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
|
2 |
+
ಬೆಂಗಳೂರು,ಫೆ.26- ವಿಧಾನಸಭೆ ಸದಸ್ಯರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ಸದನ ಪ್ರಾರಂಭವಾದಾಗ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿನ್ನೆ ನಿಧನರಾಗಿರುವುದನ್ನು ಸದನಕ್ಕೆ ತಿಳಿಸಿ ಸಂತಾಪ ನಿರ್ಣಯವನ್ನು ಮಂಡಿಸಿದರು.
|
3 |
+
ರಾಜಾ ವೆಂಕಟಪ್ಪ ನಾಯಕ ಅವರು 1957 ರ ನವೆಂಬರ್ 23 ರಂದು ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಜನಿಸಿದ್ದರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಅವರು, 1987 ರಲ್ಲಿ ಪೇಠ ಅಮ್ಮಾಪುರ ಮಂಡಲ ಪಂಚಾಯಿತಿಯ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿ ಅದೇ ಅವಧಿಯಲ್ಲಿ ಮಂಡಲ ಪ್ರಧಾನರಾಗಿ ಸೇವೆ ಸಲ್ಲಿಸುವ ಮೂಲಕ ಜನಾನುರಾಗಿಯಾಗಿದ್ದರು. 1994 ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಚುನಾಯಿತರಾಗಿದ್ದ ಅವರು, 1999, 2013 ಹಾಗೂ 2023 ರಲ್ಲಿ ಹದಿನಾರನೇ ವಿಧಾನಸಭೆಗೆ ಆಯ್ಕೆಯಾಗಿ ಪ್ರಸ್ತುತ ಸದನದಲ್ಲಿ ಸದಸ್ಯರಾಗಿ ಸಕ್ರಿಯರಾಗಿದ್ದರು. ಇತ್ತೀಚೆಗೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಎಲ್ಲಾ ಸಮುದಾಯದ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಸರಳ ಸಜ್ಜನಿಕೆಯ ನಾಯಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.
|
4 |
+
ಪ್ರತಿಯೊಬ್ಬರ ಸಾವು ನಮಗೆಲ್ಲಾ ದೊಡ್ಡ ಮಟ್ಟದ ಸಂದೇಶವನ್ನು ನೀಡುತ್ತದೆ. ನಿನ್ನೆ ಮೊನ್ನೆಯವರೆಗೆ ನಮ್ಮೊಂದಿಗೆ ಇದ್ದವರು ನಿನ್ನೆ ನಿಧನರಾಗಿದ್ದಾರೆ. ದೇವರು ಎಷ್ಟು ವರ್ಷ ಆಯಸ್ಸು ಕೊಡುತ್ತಾನೋ ಅಷ್ಟು ದಿನ ನೆಮ್ಮದಿ ಜೀವನ ನಡೆಸಬೇಕು, ಇನ್ನೊಬ್ಬರ ನೆಮ್ಮದಿಗೂ ಸಹಕರಿಸಬೇಕು. ದ್ವೇಷ, ಕೋಪ, ಸಣ್ಣಪುಟ್ಟ ವಿಚಾರಕ್ಕೆ ತೊಂದರೆ ಕೊಡುವುದರಿಂದ ಮುಂದೆ ಪಶ್ಚಾತ್ತಾಪಪಡಬೇಕಾಗಬಹುದು. ದ್ವೇಷರಹಿತ, ಅಸೂಯೆ ರಹಿತ ಜೀವನ ನಡೆಸುವಂತಾಗಲಿ ಎಂದು ಹೇಳಿ ರಾಜಾ ವೆಂಕಟಪ್ಪ ನಾಯಕ ಅವರ ನಿಧನ ಅತ್ಯಂತ ನೋವು ತಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.
|
5 |
+
ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುರಪುರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ನೋಡಲು ಹೋಗಿದ್ದೆ. ಆಗ ಅವರು ತುರ್ತು ಚಿಕಿತ್ಸಾ ಘಟಕದಲ್ಲಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನಿಸಿರಲಿಲ್ಲ. ಕಾಂಗ್ರೆಸ್ನ ನಿಷ್ಠಾವಂತ ಶಾಸಕ, ನಾಲ್ಕು ಬಾರಿ ಶಾಸಕರಾಗಿದ್ದು, ಅತ್ಯಂತ ಸರಳ, ಸಜ್ಜನಿಕೆಯಿಂದ ಇದ್ದರು. ತಮ್ಮ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕಳಕಳಿ ಹೊಂದಿದ್ದರು. ತಮ್ಮ ಅನಾರೋಗ್ಯವನ್ನು ಲೆಕ್ಕಿಸದೆ ಜನಪರ ಕಾರ್ಯ ಮಾಡುತ್ತಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೂ ಆಪ್ತರಾಗಿದ್ದರು. ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ ರಾಜಾ ವೆಂಕಟಪ್ಪ ನಾಯಕರವರ ಅಗಲಿಕೆಯ ದುಃಖ ಭರಿಸಲಿ ಎಂದು ಹೇಳಿದರು.
|
6 |
+
ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಐದು ವರ್ಷ ಈ ಸದನದ ಸದಸ್ಯರಾಗಿರುವಂತೆ ಚುನಾವಣಾ ಆಯೋಗ ಗ್ಯಾರಂಟಿ ಕೊಟ್ಟಿತ್ತು. ಆದರೆ ವಿಧಿ ಅವಕಾಶ ಮಾಡಿಕೊಡಲಿಲ್ಲ. ಸರಳ, ಸಜ್ಜನಿಕೆಯುಳ್ಳವರಾಗಿದ್ದ ಅವರು, ಅವರಾಯಿತು, ಅವರ ಕ್ಷೇತ್ರವಾಯಿತು ಎಂಬಂತಿದ್ದರು. ಅವರ ಮನೆತನ ಸ್ವಾತಂತ್ರ್ಯ ಹೋರಾಟದ ಮನೆತನವಾಗಿತ್ತು ಎಂದು ಸ್ಮರಿಸಿದರು.
|
7 |
+
ನಿರುದ್ಯೋಗ ತಗ್ಗಿಸಲು ಪ್ರತಿ ವರ್ಷ ಬೃಹತ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ
|
8 |
+
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, 1987 ರಿಂದಲೂ ಅವರು ನನಗೆ ಪರಿಚಯ. ನಾಲ್ಕು ಬಾರಿ ಶಾಸಕರಾಗಿದ್ದರು. ರಾಜ ರಾಜನಾಗಿ, ಬಡವ ಬಡವನಾಗಿ, ಶ್ರೀಮಂತ ಶ್ರೀಮಂತನಾಗಿರಲು ಸಾಧ್ಯವಿಲ್ಲ . ಆದರೆ ಸಂಬಂಧ ಮಾತ್ರ ಶಾಶ್ವತವಾಗಿ ಇರುತ್ತದೆ. ನಾಲ್ಕು ದಿನದ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದೆ. ರಾಜ್ಯಸಭೆ ಚುನಾವಣೆಗೆ ಮತ ಹಾಕುವುದಾಗಿ ಹೇಳಿದ್ದರು. ಯಾರಿಗೂ ತೊಂದರೆ ಕೊಟ್ಟವರಲ್ಲ. ಅವರ ಅಭಿಮಾನಿಯೊಬ್ಬ ನಿಧನದ ಸುದ್ದಿ ಕೇಳಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಜಾತಶತ್ರು ಎಂದು ಅವರು ಜನಪ್ರಿಯರಾಗಿದ್ದರು ಎಂದು ಅವರ ಒಡನಾಟದ ಘಟನಾವಳಿಗಳನ್ನು ಮೆಲುಕು ಹಾಕಿದರು.ಸಚಿವರಾದ ಜಮೀರ್ ಅಹಮ್ಮದ್ ಖಾನ್, ಪ್ರಿಯಾಂಕ್ ಖರ್ಗೆ, ಡಾ.ಶರಣ ಪ್ರಕಾಶ್ ಪಾಟೀಲ್, ಮಧು ಬಂಗಾರಪ್ಪ, ಶಾಸಕರಾದ ಮಾನಪ್ಪ ವಜ್ಜಲ್, ಆರಗ ಜ್ಞಾನೇಂದ್ರ, ಅಜಯ್ ಧರ್ಮಸಿಂಗ್, ನಾಗರಾಜ, ಎನ್.ಟಿ.ಶ್ರೀನಿವಾಸ್ ಅವರು ಮಾತನಾಡಿ ರಾಜಾ ವೆಂಕಟಪ್ಪ ನಾಯಕ ಅವರ ಸೇವೆಯನ್ನು ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದರು.
|
9 |
+
ಬಳಿಕ ಸದನದ ಸದಸ್ಯರೆಲ್ಲಾ ಎದ್ದು ನಿಂತು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಸಂತಾಪ ಸೂಚಿಸಲಾಯಿತು. ಸಭಾಧ್ಯಕ್ಷರು ಮಾತನಾಡಿ, ಸದನದಲ್ಲಿ ಕೈಗೊಂಡ ಸಂತಾಪ ನಿರ್ಣಯದ ಪ್ರತಿಯನ್ನು ಅವರ ಕುಟುಂಬ ವರ್ಗಕ್ಕೆ ಕಳುಹಿಸಿಕೊಡುವುದಾಗಿ ಪ್ರಕಟಿಸಿದರು.
|
10 |
+
ವಿಧಾನಪರಿಷತ್
|
11 |
+
ಬೆಂಗಳೂರು,ಫೆ.26- ಭಾನುವಾರ ಅಕಾಲಿಕ ನಿಧನರಾದ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ್ ಅವರಿಗೆ ವಿಧಾನಪರಿಷತ್ನಲ್ಲಿ ಭಾವಪೂರ್ಣ ಸಂತಾಪ ಸೂಚಿಸಲಾಯಿತು. ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಅವರು ಸಂತಾಪ ನಿರ್ಣಯವನ್ನು ಮಂಡಿಸಿದರು.
|
12 |
+
ಬಳಿಕ ಮಾತನಾಡಿದ ಅವರು, ರಾಜಾ ವೆಂಕಟಪ್ಪ ನಾಯಕ್ ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವ��� ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾಪೆರ್ರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೇಳಿದರು.
|
13 |
+
ಬಳಿಕ ಸಂತಾಪ ನಿರ್ಣಯದ ವೇಳೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದರು, ರಾಜಾ ವೆಂಕಟಪ್ಪ ನಾಯಕ್ ಅವರು ಎಂದಿಗೂ, ಯಾರಿಗೂ ನೋಯಿಸದ ನೇರ ನಿಷ್ಠೂರವಾದಿ ರಾಜಕಾರಣಿಯಾಗಿದ್ದರು. ಅವರೊಬ್ಬ ಸ್ನೇಹಜೀವಿಯೂ ಕೂಡ. ಇಂಥವರು ರಾಜಕಾರಣದಲಿ ತುಂಬಾ ಅಪರೂಪ. ಇಷ್ಟು ಬೇಗ ನಮ್ಮನ್ನು ಬಿಟ್ಟು ಅಗಲುತ್ತಾರೆ ಎಂಬ ಸಣ್ಣ ಸುಳಿವು ಕೂಡ ಇರಲಿಲ್ಲ ಎಂದು ವಿಷಾದಿಸಿದರು.
|
14 |
+
ಸಭಾನಾಯಕ ಹಾಗೂ ಸಚಿವ ಭೋಸ್ರಾಜ್ ಮಾತನಾಡಿ, ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ್ ಅವರು ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ತಂದೆಯೂ ಕೂಡ ಎರಡು ಬಾರಿ ಕಾಂಗ್ರೆಸ್ನಿಂದ ಗೆದ್ದಿದ್ದರು. ಬಡವರು, ಶೋಷಿತರು, ದೀನದಲಿತರು, ಹಿಂದುಳಿದ ವರ್ಗದವರ ಬಗ್ಗೆ ಅಪಾರ ಕಾಳಜಿಯನ್ನು ಇಟ್ಟುಕೊಂಡಿದ್ದರು.
|
15 |
+
ಕಾಂಗ್ರೆಸ್ ಶಾಸಕರಿಗೆ ವ್ಹಿಪ್ ಜಾರಿ
|
16 |
+
ವಿಶೇಷವಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ತಮ್ಮದೇ ಆದ ಕನಸು ಹೊಂದಿದ್ದರು. ಅವರ ಅಗಲಿಕೆ ತುಂಬಾ ನೋವು ತಂದಿದೆ ಎಂದು ಕಂಬನಿ ಮಿಡಿದರು. ವಿಧಾನಪರಿಷತ್ನ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ರಾಜಾ ವೆಂಕಟಪ್ಪ ನಾಯಕ್ ಅವರನ್ನು ಆ ಭಾಗದಲ್ಲಿ ಬಡವರ ಬಂಧು ಎಂದು ಕರೆಯುತ್ತಿದ್ದರು. ರಾಜಮನೆತನದಿಂದ ಬಂದಿದ್ದರೂ ಎಂದಿಗೂ ಹಮ್ಮು-ಬಿಮ್ಮು ತೋರಿದವರಲ್ಲ.ಹೇಳಬೇಕಾದುದನ್ನು ನೇರವಾಗೇ ಹೇಳುತ್ತಿದ್ದ ನಿಷ್ಠೂರವಾದಿ. ರಾಜ್ಯವು ಒಬ್ಬ ಉತ್ತಮ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ವಿಷಾದಿಸಿದರು.
|
17 |
+
ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ನಾನು ಕಲಬುರಗಿ ಜಿಲ್ಲೆಯ ಉಸ್ತುವಾರಿಯಾದ ನಂತರ ನನಗೆ ಅವರು ಆತ್ಮೀಯರಾಗಿದ್ದರು. ಕಾಂಗ್ರೆಸ್ನಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕೆಂಬುದು ಅವರ ಉದ್ದೇಶವಾಗಿತ್ತು. ಆದರೆ ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆಂದು ಕನಸಿನಲ್ಲೂ ಊಹಿಸಿರಲಿಲ್ಲ ಎಂದು ಹೇಳಿದರು.
|
18 |
+
ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ರಾಜಾ ವೆಂಕಟಪ್ಪ ನಾಯಕ್ ನಮ್ಮ ಸಂಬಂಕರೂ ಹೌದು. 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾಗ ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದು ಬಿಡುಗಡೆಯಾಗಿ ಬರುತ್ತೇನೆ ಎಂದು ಹೇಳಿದ್ದರು. ಆದರೆ ವಿಯಾಟ ಬೇರೆಯಾಗಿತ್ತು ಎಂದು ವಿಷಾದಿಸಿದರು. ಸದಸ್ಯೆ ತೇಜಸ್ವಿನಿ ರಮೇಶ್ ಕೂಡ ಮಾತನಾಡಿ, ನಾನು ಪತ್ರಕರ್ತೆಯಾಗಿದ್ದಾಗ ಅವರನ್ನು ಸಂದರ್ಶನ ಮಾಡುವ ಅವಕಾಶ ಸಿಕ್ಕಿತ್ತು. ರಾಜಮನೆತನದಿಂದ ಬಂದಿದ್ದರೂ ಸಾಮಾನ್ಯ ಜನರ ಬಗ್ಗೆ ಇದ್ದ ಕಳಕ��ಿ ಕಂಡು ನಾನೇ ಆಶ್ಚರ್ಯಚಕಿತಳಾಗಿದ್ದೇನೆ ಎಂದು ಸ್ಮರಿಸಿದರು.
|
19 |
+
ಸದಸ್ಯ ಪ್ರಕಾಶ್ ರಾಥೋಡ್ ಮಾತನಾಡಿ, ರಾಜಾ ವೆಂಕಟಪ್ಪ ನಾಯಕ ಒಬ್ಬ ೀಮಂತ ನಾಯಕ. ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾಗಿದ್ದ ಅವರು ನಂಬಿದ ತತ್ವ ಸಿದ್ಧಾಂತದಿಂದ ಎಂದೂ ಹಿಂದೆ ಸರಿದವರಲ್ಲ ಎಂದು ಕಂಬನಿ ಮಿಡಿದರು. ಸಂತಾಪ ಸೂಚಿಸಿದ ಬಳಿಕ ಮೃತರ ಗೌರವಾರ್ಥ ಎಲ್ಲ ಸದಸ್ಯರು ಒಂದು ನಿಮಿಷ ಎದ್ದು ಮೌನಾಚರಣೆ ಸಲ್ಲಿಸಿದರು.
|
20 |
+
ಸಂತಾಪ ನಿರ್ಣಯದ ಬಳಿಕ ಪ್ರಕಟಣೆ ಓದಿದ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನ ಸಲಹಾ ಸಮಿತಿಯಲ್ಲಿ ತೆಗೆದುಕೊಂಡು ನಿರ್ಣಯದಂತೆ ರಾಜಾ ವೆಂಕಟಪ್ಪ ನಾಯಕ್ ಹಾಲಿ ಸದಸ್ಯರಾಗಿರುವುದರಿಂದ ಅವರಿಗೆ ಗೌರವ ಸೂಚಿಸಿ ಸದನವನ್ನು ಒಂದು ದಿನದ ಮಟ್ಟಿಗೆ ಮುಂದೂಡಬೇಕೆಂದು ತೀರ್ಮಾನಿಸಲಾಗಿದೆ. ಅದರಂತೆ ಬುಧವಾರ ಬೆಳಗ್ಗೆ 9.30ಕ್ಕೆ ಸದನವನ್ನು ಮುಂದೂಡಲಾಗಿದೆ ಎಂದು ಪ್ರಕಟಿಸಿದರು.
|
eesanje/url_46_223_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರೆಸಾರ್ಟ್ನತ್ತ ತೆರಳಿದ ಕಾಂಗ್ರೆಸ್ ಶಾಸಕರು
|
2 |
+
ಬೆಂಗಳೂರು,ಫೆ.26- ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಶಾಸಕರನ್ನು ಇಂದು ನಗರದ ಖಾಸಗಿ ರೆಸಾರ್ಟ್ಗೆ ಸ್ಥಳಾಂತರಿಸಲಾಗಿದೆ. ಇಂದು ಬೆಳಿಗ್ಗೆ ನಡೆದ ವಿಧಾನಸಭೆಯ ಕಲಾಪ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ಸಂತಾಪ ಸೂಚಕ ಸಭೆಯಾಗಿ ಪರಿವರ್ತನೆಯಾಯಿತು. ಭಾವಪೂರ್ಣ ಶ್ರದ್ಧಾಂಜಲಿಯ ಬಳಿಕ ಕಾಂಗ್ರೆಸ್ ಶಾಸಕರು ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಖಾಸಗಿ ಹೋಟೆಲ್ಗೆ ಸ್ಥಳಾಂತರಗೊಂಡಿದ್ದಾರೆ.
|
3 |
+
ನಿರುದ್ಯೋಗ ತಗ್ಗಿಸಲು ಪ್ರತಿ ವರ್ಷ ಬೃಹತ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ
|
4 |
+
ಇಂದು ರಾತ್ರಿ ಹೋಟೆಲ್ನಲ್ಲಿ ತಂಗಲಿರುವ ಶಾಸಕರು ಶಾಸಕಾಂಗ ಸಭೆಯ ಬಳಿಕ ನಾಳೆ ಒಟ್ಟಾಗಿ ಬಸ್ನಲ್ಲಿ ವಿಧಾನಸಭೆಗೆ ಆಗಮಿಸಿ ಮತದಾನ ಮಾಡಲಿದ್ದಾರೆ. 135 ಶಾಸಕರ ಸಂಖ್ಯಾಬಲದಿಂದ ಕಾಂಗ್ರೆಸ್ನಲ್ಲಿ ರಾಜಾ ವೆಂಕಟಪ್ಪ ನಾಯಕರ ನಿಧನದ ಬಳಿಕ 134 ಶಾಸಕರ ಸಂಖ್ಯಾಬಲವಾಗಿದೆ. ಜೊತೆಗೆ ನಾಲ್ಕು ಮಂದಿ ಪಕ್ಷೇತರ ಶಾಸಕರ ಬೆಂಬಲವನ್ನು ಕಾಂಗ್ರೆಸ್ ನಾಯಕರು ಕೇಳಿದ್ದಾರೆ. ಶತಾಯಗತಾಯ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂಬ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಅಡ್ಡ ಮತದಾನವಾಗದಂತೆ ಮುನ್ನೆಚ್ಚರಿಕೆ ವಹಿಸಿದೆ.
|
5 |
+
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದು ರಾಜಕೀಯ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದ್ದಾರೆ. ಕೆಲವು ಹಿರಿಯ ಶಾಸಕರು ಶಾಸಕಾಂಗ ಸಭೆಗೆ ಗೈರು ಹಾಜರಾಗುವ ಸಾಧ್ಯತೆಯಿದೆ. ಆದರೆ ಮತದಾನಕ್ಕೆ ನೇರವಾಗಿ ಆಗಮಿಸಿ ಪಕ್ಷದ ಅಭ್ಯರ್ಥಿ ಪರವಾಗಿ ಮತ ಚಲಾಯಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೂ ಕಾಂಗ್ರೆಸ್ನಲ್ಲಿ ಒಳಗೊಳಗೇ ಆತಂಕ ಗೂಡು ಕಟ್ಟಿದೆ.
|
eesanje/url_46_223_7.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕುಪೇಂದ್ರ ರೆಡ್ಡಿ ಗೆಲ್ಲಿಸುವ ಶಕ್ತಿ ಬಿಜೆಪಿ-ಜೆಡಿಎಸ್ಗೆ ಇಲ್ಲ; ರಿಜ್ವಾನ್
|
2 |
+
ಬೆಂಗಳೂರು,ಫೆ.26- ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸದಸ್ಯ ಸ್ಥಾನಗಳಿಗೆ ನಾಳೆ ನಡೆಯುವ ಚುನಾವಣೆಯಲ್ಲಿ 5ನೇ ಅಭ್ಯರ್ಥಿಯನ್ನು ಗೆಲ್ಲಿಸುವ ಶಕ್ತಿ ಬಿಜೆಪಿ-ಜೆಡಿಎಸ್ಗೆ ಇಲ್ಲ ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ನ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಬಹುದು. ಅದೇ ರೀತಿ ಬಿಜೆಪಿಯವರು ಒಬ್ಬರನ್ನು ಗೆಲ್ಲಿಸಿಕೊಳ್ಳಬಹುದು. ಆದರೂ 5 ನೇ ಅಭ್ಯರ್ಥಿಯನ್ನು ಏಕೆ ಬಿಜೆಪಿ-ಜೆಡಿಎಸ್ನವರು ಸ್ಪರ್ಧೆಗಿಳಿಸಿದ್ದಾರೆ ಎಂದು ಪ್ರಶ್ನಿಸಿದರು.
|
3 |
+
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಐಟಿ, ಇಡಿ, ಸಿಬಿಐನಿಂದ ನೋಟಿಸ್ ಕೊಡಿಸುವ, ಒತ್ತಡ ಹಾಕಿಸುವ ಪ್ರಯತ್ನ ಮಾಡಬಹುದು. ಆಪರೇಷನ್ ಕಮಲ ಮಾಡಿ ಕೋಟ್ಯಂತರ ರೂ. ಭ್ರಷ್ಟಾಚಾರದ ಹಣ ಸುರಿಯುತ್ತಾರೆ. ಇಂತಹ ಅವರ ನೀತಿ ತಂತ್ರ ಇದ್ದೇ ಇರುತ್ತದೆ. ನಮ್ಮ ಶಾಸಕರನ್ನು ಒಂದೆಡೆ ಸೇರಿಸಿ ಸಮಾಲೋಚನೆ ನಡೆಸಿ ರಾಜ್ಯಸಭೆ ಚುನಾವಣೆಯಲ್ಲಿ ಯಾವ ರೀತಿ ಮತದಾನ ಮಾಡಬೇಕು.ಯಾವ ಅಭ್ಯರ್ಥಿಗೆ ಯಾವ ಶಾಸಕರು ಮತ ಹಾಕಬೇಕು ಎಂಬ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಈ ಬಾರಿ 70 ಕ್ಕಿಂತ ಅಧಿಕ ಶಾಸಕರು ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಅವರಿಗೆ ಇದು ಮೊದಲ ರಾಜ್ಯಸಭಾ ಚುನಾವಣೆಯಾಗಿದೆ. ಹೀಗಾಗಿ ಒಂದೆಡೆ ಸೇರುತ್ತಿದ್ದೇವೆ. ರಾಜ್ಯಸಭಾ ಚುನಾವಣೆ ನಂತರ ಲೋಕಸಭೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.
|
4 |
+
ನಿರುದ್ಯೋಗ ತಗ್ಗಿಸಲು ಪ್ರತಿ ವರ್ಷ ಬೃಹತ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ
|
5 |
+
ಲೋಕಸಭಾ ಚುನಾವಣೆಗೆ ಸ್ರ್ಪಧಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ತೀರ್ಮಾನ ಏನಾಗುತ್ತೋ ಗೊತ್ತಿಲ್ಲ. ಚುನಾವಣೆಗೆ ಸ್ರ್ಪಧಿಸಲು ಬಹಳಷ್ಟು ಜನ ಅರ್ಹರಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಖಾನ್, ಶಾಸಕ ಎನ್.ಎ.ಹ್ಯಾರಿಸ್ ಅಲ್ಲದೆ ಹೊಸಬರು ಕೂಡ ಆಕಾಂಕ್ಷಿಗಳಾಗಿದ್ದಾರೆ. ಪಕ್ಷದಲ್ಲಿ ಏನೇ ತೀರ್ಮಾನವಾದರೂ ಅದಕ್ಕೆ ಬದ್ಧರಾಗಿರುತ್ತೇವೆ. ಲೋಕಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ ಎಂದರು.
|
eesanje/url_46_223_8.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಕಾಂಗ್ರೆಸ್ ಶಾಸಕರಿಗೆ ವ್ಹಿಪ್ ಜಾರಿ
|
2 |
+
ಬೆಂಗಳೂರು,ಫೆ.26- ಕಾಂಗ್ರೆಸ್ನ ಎಲ್ಲಾ ಶಾಸಕರಿಗೂ ವ್ಹಿಪ್ ನೀಡಿರುವುದಾಗಿ ರಾಜ್ಯಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಗಿದೆ. ಖಾಸಗಿ ಹೋಟೆಲ್ನಲ್ಲಿ ಎಲ್ಲಾ ಶಾಸಕರು ರಾತ್ರಿ ಉಳಿದುಕೊಳ್ಳಲಿದ್ದು, ನಾಳೆ ಬೆಳಿಗ್ಗೆ ಶಾಸಕರೆಲ್ಲಾ ಹೋಟೆಲ್ನಿಂದ ವಿಧಾನಸೌಧಕ್ಕೆ ಬಸ್ಸಿನಲ್ಲಿ ಬಂದು ರಾಜ್ಯಸಭೆ ಚುನಾವಣೆಗೆ ಮತ ಚಲಾಯಿಸುತ್ತೇವೆ.
|
3 |
+
ಫೆ.29ಕ್ಕೆ ಬಿಜೆಪಿ ಮೊದಲ ಪಟ್ಟಿ: ರಾಜ್ಯದ 10 ಕ್ಷೇತ್ರ ಸೇರಿ 150 ಅಭ್ಯರ್ಥಿಗಳು ಫೈನಲ್
|
4 |
+
ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮತದಾನ ಮಾಡುವ ಕುರಿತಂತೆ ತರಬೇತಿ ನೀಡಲಾಗುತ್ತದೆ. ಕಾಂಗ್ರೆಸ್ನಲ್ಲಿ ಅಡ್ಡ ಮತದಾನದ ಭೀತಿಯಿಲ್ಲ. ಒಂದು ವೇಳೆ ಅಡ್ಡಮತದಾನವಾದರೆ ವಿಧಾನಸಭಾಧ್ಯಕ್ಷರಿಗೆ ದೂರು ನೀಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಗುತ್ತದೆ. ಹೀಗಾಗಿ ಯಾರೂ ಅಡ್ಡಮತದಾನ ಮಾಡುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
|
eesanje/url_46_223_9.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಿರುದ್ಯೋಗ ತಗ್ಗಿಸಲು ಪ್ರತಿ ವರ್ಷ ಬೃಹತ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಫೆ.26- ರಾಜ್ಯದಲ್ಲಿ ನಿರುದ್ಯೋಗವನ್ನು ತಗ್ಗಿಸಲು ಇನ್ನು ಮುಂದೆ ಪ್ರತಿ ವರ್ಷ ಪ್ರಾದೇಶಿಕವಾರು ಬೃಹತ ಉದ್ಯೋಗ ಮೇಳವನ್ನು ಆಯೋಜಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸ ಜಿಟಿಟಿಸಿ ಕೇಂದ್ರಗಳನ್ನು ತೆರೆಯುವುದಾಗಿ ತಿಳಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, 580ಕ್ಕೂ ಹೆಚ್ಚು ಕಂಪನಿಗಳ ಉದ್ಯೋಗದಾತರು ಸಮ್ಮೇಳನದಲ್ಲಿ ಭಾಗವಹಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ನೀಡಲು ಮುಂದೆ ಬಂದಿದ್ದಾರೆ. ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
|
3 |
+
ಸರ್ಕಾರದ ವತಿಯಿಂದ ದೇಶದಲ್ಲಿ ಅತಿ ದೊಡ್ಡದಾದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇನ್ನು ಮುಂದೆ ಮೈಸೂರು, ಬೆಂಗಳೂರು, ಬೆಳಗಾವಿ, ಕಲಬುರಗಿ ಪ್ರಾದೇಶಿಕವಾರು ಉದ್ಯೋಗ ಮೇಳವನ್ನು ಪ್ರತಿ ವರ್ಷ ಆಯೋಜಿಸಲಾಗುವುದು. ಜೊತೆಗೆ ಮಾರುಕಟ್ಟೆ ಬೇಡಿಕೆ ಆಧಾರಿತವಾಗಿ ಮಾನವ ಸಂಪನ್ಮೂಲ ಅಭಿವೃದ್ಧಿಪಡಿಸಲು ಕೌಶಲ್ಯ ತರಬೇತಿ ನೀಡಲಾಗುತ್ತದೆ.
|
4 |
+
ಈಗಾಗಲೇ ಐಟಿಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉದ್ಯೋಗಧಾರಿತ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಸರ್ಕಾರಿ ಟೋಲ್ರೂಮ್-ಟ್ರೈನಿಂಗ್ ಸೆಂಟರ್(ಜಿಟಿಟಿಸಿ)ಗಳನ್ನು ತೆರೆಯಲಾಗಿದೆ. ಮತ್ತಷ್ಟು ಕೇಂದ್ರಗಳನ್ನು ತೆರೆದು ಕೌಶಲ್ಯ ತರಬೇತಿಯನ್ನು ಹೆಚ್ಚಿಸುವುದಾಗಿ ಹೇಳಿದರು.ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗುತ್ತಲೇ ಇದೆ. 2014ರಲ್ಲಿ ಶೇ.2.1ರಷ್ಟಿದ್ದ ನಿರುದ್ಯೋಗದ ಪ್ರಮಾಣ 2023ರ ವೇಳೆಗೆ ಶೇ.8.40ರಷ್ಟಾಗಿದೆ. ಲೋಕಸಭೆ ಚುನಾವಣೆ ವೇಳೆ ನರೇಂದ್ರಮೋದಿ ಅವರು ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಉದ್ಯೋಗ ಸೃಷ್ಟಿಸುವ ಬದಲಾಗಿ ಉದ್ಯೋಗ ನಷ್ಟವಾಗುತ್ತಿದೆ. ಭರವಸೆ ಈಡೇರಿಕೆಯಾಗಿದ್ದರೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಅದು ಸಾಧ್ಯವಾಗಿಲ್ಲ ಎಂದು ದೂರಿದರು.
|
5 |
+
ಫೆ.29ಕ್ಕೆ ಬಿಜೆಪಿ ಮೊದಲ ಪಟ್ಟಿ: ರಾಜ್ಯದ 10 ಕ್ಷೇತ್ರ ಸೇರಿ 150 ಅಭ್ಯರ್ಥಿಗಳು ಫೈನಲ್
|
6 |
+
ನಿರುದ್ಯೋಗದ ಸಮಸ್ಯೆ ಹೆಚ್ಚಾದರೆ ದೇಶದ ಸಂಪತ್ತು ಸೃಷ್ಟಿಸಬೇಕಾದ ಯುವಜನ ನಿರರ್ಥಕವಾಗುತ್ತದೆ. ಇದು ಅಭಿವೃದ್ಧಿಗೆ ಘಾಸಿ ಮಾಡುತ್ತದೆ. ದೇಶದಲ್ಲಿ ನಿರುದ್ಯೋಗ ಸವಾಲಿನಂತೆ ಬೆಳೆದು ನಿಂತಿದ್ದು, ಅದನ್ನು ನಿವಾರಿಸಬೇಕಾದರೆ ಪ್ರಾಮಾಣಿಕ ಪ್ರಯತ್ನಗಳು ಅಗತ್ಯ. ರಾಜ್ಯ ಸರ್ಕಾರ ಪದವೀಧರ ನಿರುದ್ಯೋಗಿಗಳಿಗೆ ಮತ್ತು ಡಿಫ್ಲೋಮೊದಾರರಿಗೆ ನಿರುದ್ಯೋಗ ಭತ್ಯೆ ನೀಡುತ್ತಿದೆ. ಜೊತೆಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತಿದೆ ಎಂದು ಹೇಳಿದರು.
|
7 |
+
ಉದ್ಯೋಗ ಮೇಳದಲ್ಲಿ 75 ಸಾವಿರ ಮಂದಿ ಈವರೆಗೂ ನೋಂದಣಿಯಾಗಿದ್ದಾರೆ. ಉದ್ಯೋಗ ಪಡೆಯುವವರಿಗೆ ಶುಭವಾಗಲಿ ಎಂದು ಮುಖ್ಯಮಂತ್ರಿ ಹಾರೈಸಿದರು. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, 75 ಸಾವಿರ ಮಂದಿ ನೋಂದಾಣಿಯಾಗಿರುವುದು ದೇಶದಲ್ಲೇ ಐತಿಹಾಸಿಕ ದಾಖಲೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರದವರೆಗೂ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವವರು ಮೇಳದಲ್ಲಿ ಭಾಗವಹಿಸಿದ್ದಾರೆ. ಒಂದು ಲಕ್ಷ ಉದ್ಯೋಗಗಳ ನೇಮಕಾತಿಗೆ ಖಾಸಗಿ ಕಂಪನಿಗಳು ಮುಂದೆ ಬಂದಿವೆ ಎಂದು ತಿಳಿಸಿದರು.
|
8 |
+
ಪಂಚಖಾತ್ರಿಗಳಲ್ಲಿ ಒಂದಾಗಿರುವ ಯುವನಿ ಕಾರ್ಯಕ್ರಮ ಯುವ ಸಮುದಾಯದ ಬೆನ್ನಲೆಬುಗಿದೆ. 1.40 ಲಕ್ಷ ಪದವೀಧರರು ಹಾಗೂ ಡಿಫ್ಲೋಮೊದಾರರ ಬ್ಯಾಂಕ್ ಖಾತೆಗಳಿಗೆ ಯುವನಿಧಿ ಹಣ ಸಂದಾಯವಾಗುತ್ತಿದೆ. ಸರ್ಕಾರ ಯುವ ಸಮುದಾಯದ ಜೊತೆಗಿರಲಿದೆ ಎಂದು ಭರವಸೆ ನೀಡಿದರು. ಯುವನಿಧಿ ಅಡಿ ನೋಂದಣಿಯಾಗಿರುವವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಇಂದು ನೆಪಮಾತ್ರಕ್ಕೆ ಉದ್ಯೋಗ ಮೇಳ ನಡೆಯುತ್ತಿಲ್ಲ. ಎಲ್ಲರಿಗೂ ಉದ್ಯೋಗ ಕೊಡಿಸಲಾಗುತ್ತಿದೆ. ಉದ್ಯೋಗ ಸಿಗದೆ ಇದ್ದ ನೋಂದಾಯಿತರ ದತ್ತಾಂಶಗಳ ಮೇಲೆ ನಿಗಾ ಇಡಲಾಗುವುದು. ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದು, ಅಗತ್ಯ ತರಬೇತಿ ಹಾಗೂ ಕೌಶಲ್ಯ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು.
|
9 |
+
ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಯುವಕ ಸಾವು..
|
10 |
+
ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಮಾದರಿಯಾಗಿ ನಿರುದ್ಯೋಗ ನಿವಾರಣೆಗೆ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಭರವಸೆ ನೀಡಿದರು. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಉದ್ಯೋಗ ಮೇಳ ನಡೆಯಲಿದ್ದು, ಯುವಕರ ಸಮಸ್ಯೆಗಳಿಗೆ ಸರ್ಕಾರದ ಯಂತ್ರ ಸ್ಪಂದಿಸಲಿದೆ. ಬಜೆಟ್ನಲ್ಲಿ ಶಿಕ್ಷಣಕ್ಕಿಂತಲೂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಮನವಿ ನೀಡಲಾಗಿತ್ತು. ಮುಖ್ಯಮಂತ್ರಿಯವರು ಅದಕ್ಕೆ ಸ್ಪಂದಿಸಿದ್ದಾರೆ. ಭವಿಷ್ಯದಲ್ಲಿ ಯುವಜನರ ಸಮಗ್ರ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಹಾಗು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಯುವ ಸಮೃದ್ಧಿ ಲಾಂಛನವನ್ನು ಅನಾವರಣಗೊಳಿಸಲಾಯಿತು.
|
eesanje/url_46_224_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಯುವಕ ಸಾವು..
|
2 |
+
ನೆಲಮಂಗಲ,ಫೆ.26- ಬೈಕ್ ವೀಲಿಂಗ್ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯ ನವಯುಗ ಟೋಲ್ ಬಳಿ ರಾತ್ರಿ ನಡೆದಿದೆ.ದಾಸರಹಳ್ಳಿ ಮೂಲದ ರಾಜೇಶ್(20) ಮೃತ ಯುವಕ. ರಾತ್ರಿ ಒಂದು ಘಂಟೆ ಸುಮಾರಿಗೆ ತಂಡ ತಂಡವಾಗಿ ನವಯುಗ ಟೋಲ್ನ ಎಕ್ಸಪ್ರೆಸ್ ಹೈವೇಗೆ ಬಂದ ವೀಲಿಂಗ್ ಪುಂಡರು ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನವಯುಗ ಟೋಲ್ ಬಳಿ ಜಮಾಯಿಸಿ ನಂತರ ತಂಡ ತಂಡವಾಗಿ ನೆಲಮಂಗಲದವರೆಗೆ ವೀಲೀಂಗ್ ಮಾಡಿಕೊಂಡು ಬಂದಿದ್ದಾರೆ.
|
3 |
+
ನೆಲಮಂಗಲದ ಸುಭಾಷ್ನಗರದ ಬಳಿಯಿರುವ ಟೋಲ್ ಹತ್ತಿರ ವಾಪಸ್ಸು ಬೆಂಗಳೂರು ಕಡೆಗೆ ಹೋಗುವ ಸಲುವಾಗಿ ಹೆದ್ದಾರಿ ಡಿವೈಡರ್ ಹತ್ತಿಸುತ್ತಿದ್ದಾಗ ಇದೇ ತಂಡದ ಶಾಹಿಲ್ ವೀಲಿಂಗ್ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ರಭಸಕ್ಕೆ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
|
4 |
+
ವೀರಪ್ಪನ್ ಪುತ್ರಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿತ್ತು ಆರ್ಎಸ್ಎಸ್
|
5 |
+
ಗಾಯಗೊಂಡಿದ್ದ ಶಾಹಿಲ್ನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದ್ದು, ಆತನ ಸ್ಥಿತಿಯೂ ಗಂಭೀರವಾಗಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_224_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಡು ರಸ್ತೆಯಲ್ಲೇ ಯುವಕನ ಭೀಕರ ಕೊಲೆ
|
2 |
+
ಆನೇಕಲ್. ಫೆ. 25- ಹಳೆ ವೈಷ್ಯಮ್ಯದ ಹಿನ್ನೆಲೆಯಲ್ಲಿ ನಡುರಸ್ತೆಯಲ್ಲಿ ಯುವಕನನ್ನುಮಾರಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಸೂರ್ಯನಗರ ಪೋಲಿಸ್ ಠಾಣೆಯ ವ್ಯಾಪ್ತಿಯ ಮರಸೂರು ಗ್ರಾಮ ಬಳಿ ಇಂದು ಮುಂಜಾನೆ ನಡೆದಿದೆ.
|
3 |
+
ಜಯ್ ಕುಮಾರ್(27) ಕೊಲೆಯಾದ ಯುವಕನಾಗಿದ್ದು ಈತ ಕಳೆದ 2017ರಲ್ಲಿ ಮನೋಜ್ ಬಬ್ಲು ಎಂಬ ವ್ಯಕ್ತಿಯ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದು ಜಾಮೀನಿನ ಮೇಲೆ ಏಳು ತಿಂಗಳ ಹಿಂದೆ ಹೊರಗೆ ಬಂದಿದ್ದ. ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ಮೊಬೈಲ್ ಕರೆ ಮಾಡಿ ಮನೆಯಲ್ಲಿ ಮಲಗಿದ್ದವನನ್ನು ಹೊರ ಕರೆದು ನಂತರ ಸ್ವಲ್ಪ ದೂರ ಮಾತನಾಡುತ್ತಾ ಕರೆದುಕೊಂಡು ಹೋಗಿ ತಲೆಗೆ ಮಾರಕಾಸ್ತ್ರ ದಿಂದ ಹೊಡೆದಿದ್ದಾರೆ.
|
4 |
+
ರಾಜ್ಯಸಭಾ ಚುನಾವಣೆಗೆ ಮೂರು ಪಕ್ಷಗಳಲ್ಲೂ ತಂತ್ರ-ಪ್ರತಿತಂತ್ರ
|
5 |
+
ಜಯ್ ಕುಮಾರ್ ಕುಸಿದು ಬೀಳುತ್ತಿದ್ದಂತೆ ಸುಮಾರು ನಾಲ್ಕೈದು ಮಂದಿ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆ ಆಗಿದ್ದ ಮನೋಜ್ ಕಡೆಯವರು ಈ ಕೊಲೆ ಮಾಡಿಸಿದ್ದಾರೆ ಎಂದು ಜಯ್ ಪೋಷಕರು ದೂರಿದ್ದಾರೆ. ನಡು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವವನ್ನು ನೋಡಿದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಎಸ್.ಪಿ. ಮಲ್ಲಿಕಾರ್ಜುನ್ ಬಾಲದಂಡಿರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.ಆನೇಕಲ್ ಭಾಗದಲ್ಲಿ ಮತ್ತೆ ಅಪರಾಧ ಚಟುವಟಿಕೆ ಹೆಚ್ಚಾಗುತ್ತಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ.
|
eesanje/url_46_224_11.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಮನೆ ಬಾಗಿಲಿಗೆ ಇ – ಸ್ಟ್ಯಾಂಪ್ : ಸದ್ಯದಲ್ಲೇ ಸರ್ಕಾರಿ ವೆಬ್ಸೈಟ್ ಆರಂಭ
|
2 |
+
ಬೆಂಗಳೂರು, ಫೆ.25- ರಾಜ್ಯ ಸರ್ಕಾರದ ಸಹಕಾರದೊಂದಿಗೆ ಲೀಗಲ್ ಕರ್ನಾಟಕ.ಕಾಂ ಮೂಲಕ ಮನೆಬಾಗಿಲಿಗೆ ಇ-ಸ್ಟಾಂಪ್ ಪೇಪರ್ ಹಾಗೂ ಕಾನೂನು ದಾಖಲೆ ಕರಡು ಪ್ರತಿ (ಡ್ರಾಫ್ಟ್) ತಲುಪಿಸುವ ಯೋಜನೆ ಸದ್ಯದಲ್ಲೇ ಜಾರಿಗೆ ಬರಲಿದೆ.
|
3 |
+
ಮನೆ ಬಾಡಿಗೆ ಅಥವಾ ಲೀಸ್ಗೆ ಸಂಬಂಧಪಟ್ಟಂತೆ ಒಪ್ಪಂದ ಮಾಡಿಕೊಳ್ಳಲು ಇ-ಸ್ಟಾಂಪ್ ಪತ್ರಕ್ಕಾಗಿ ಸಹಕಾರಿ ಸೊಸೈಟಿಗಳಿಗೆ ತೆರಳಬೇಕಿತ್ತು. ಕೆಲವು ಸಂದರ್ಭದಲ್ಲಿ ರಜೆ ಅಥವಾ ಸರ್ವರ್ ಸಮಸ್ಯೆಯಿಂದ ತುರ್ತಾಗಿ ಬೇಕಾದಾಗ ಇದು ಸಿಗುತ್ತಿರಲಿಲ್ಲ. ಪ್ರತಿನಿತ್ಯ ಸಾರ್ವಜನಿಕರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ 24 ಗಂಟೆ ಕಾಲ ಆನ್ಲೈನ್ ಮೂಲಕ ಇ-ಸ್ಟಾಂಪ್ ಪೇಪರ್ (ಒಪ್ಪಂದ ಪತ್ರ), ಕಾನೂನು ದಾಖಲೆ ಕರಡು ಪ್ರತಿಯನ್ನು ಜನರಿಗೆ ತಲುಪಿಸುವ ಸೇವೆಯನ್ನು ಸಂಸ್ಥೆ ಪ್ರಾರಂಭಿಸಲಿದೆ.
|
4 |
+
ಸರ್ಕಾರ ಪತನದ ಕನಸು ಈಡೇರಲ್ಲ: ಸಚಿವ ಎಂ.ಬಿ.ಪಾಟೀಲ್
|
5 |
+
ಇ-ಸ್ಟಾಂಪ್ ಪೇಪರ್ ಜತೆಗೆ ಒಪ್ಪಂದ ಮಾಡಿಕೊಳ್ಳಲು ಬೇಕಾದ ಅಂಶಗಳನ್ನೊಳಗೊಂಡ ಪ್ರತಿಯೂ ಸಿಗಲಿದೆ. ಇದಕ್ಕಾಗಿ ಸಂಸ್ಥೆ ಪ್ರತ್ಯೇಕವಾಗಿ ಲೀಗಲ್ ಕರ್ನಾಟಕ.ಕಾಂ ವೆಬ್ಸೈಟ್ ಸಿದ್ಧಪಡಿಸಿದೆ. ಕರಾರು ಒಪ್ಪಂದ ಮಾಡಿಕೊಳ್ಳುವವರು ವೆಬ್ಸೈಟ್ನಲ್ಲಿ ತಮ್ಮ ವಿವರಗಳನ್ನು ನಮೂದಿಸಿದರೆ ಅರ್ಧ ಗಂಟೆಯಲ್ಲಿ ಇ-ಸ್ಟಾಂಪ್ ಆಧಾರಿತ ಕರಡು ಪ್ರತಿಯು (ಡ್ರಾಫ್ಟ್) ಗ್ರಾಹಕರು ಇರುವ ಜಾಗದಲ್ಲೇ ಬರಲಿದೆ.
|
6 |
+
ರಾಜ್ಯ ಸರ್ಕಾರವು 2008ರಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆ ಜಾರಿಗೊಳಿಸಿತ್ತು. ಅದರಂತೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಆಸ್ತಿ ಖರೀದಿ ಮತ್ತು ಮಾರಾಟ ನೋಂದಣಿಗೆ, ಮನೆ ಲೀಸ್ ಅಥವಾ ಬಾಡಿಗೆಗೆ ಮಾಡಿಕೊಳ್ಳಲು, ಪರಸ್ಪರ ಪಾಲುದಾರಿಕೆಗೆ, ಆಸ್ತಿಗಳ ಅಡಮಾನಕ್ಕೆ, ಸಾಲ ಪಡೆಯುವುದಕ್ಕೆ, ಆಸ್ತಿ ವರ್ಗಾವಣೆಗೆ, ವ್ಯವಹಾರ ನಡೆಸುವುದಕ್ಕೆ, ಕಟ್ಟಡ, ಗುತ್ತಿಗೆ ಒಪ್ಪಂದಕ್ಕೆ, ಮಾದರಿ ಸೇವಾ, ಸಹಭಾಗಿತ್ವ ಸೇರಿ ವಿವಿಧ ಬಗೆಯ ಒಪ್ಪಂದ ಮಾಡಿಕೊಳ್ಳುವುದಕ್ಕೆ ಇ-ಸ್ಟಾಂಪ್ ಪೇಪರ್ ಅವಶ್ಯಕತೆ ಇರುತ್ತದೆ.
|
7 |
+
ಹಾಗಾಗಿ ಈ ಮೇಲಿನ ಯಾವುದೇ ವ್ಯವಹಾರವನ್ನೂ ಇ-ಸ್ಟಾಂಪ್ ಪೇಪರ್ ಮೂಲಕ ಅಧಿಕೃತ ಒಪ್ಪಂದ ಮಾಡಿಕೊಂಡು ಕಾನೂನು ಬದ್ಧತೆ ದೃಢೀಕರಿಸಲಾಗುತ್ತದೆ. ಹಾಗಾಗಿ ಈ ಸಂಸ್ಥೆಯು ಒಪ್ಪಂದ ಪತ್ರ, ಅಫಿಡವಿಟ್ಗಳಿಂದ ಹಿಡಿದು ಡೀಡ್ಗಳ ಜತೆಗೆ ಲೀಗಲ್ ಡಾಕ್ಯುಮೆಂಟ್ ಡ್ರಾಫ್ಟಿಂಗ್ ಸೇವೆಯನ್ನೂ ಪರಿಣತ ಕಾನೂನು ತಂಡದಿಂದ ಒದಗಿಸಲಿದೆ.
|
eesanje/url_46_224_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕ್ಷೇತ್ರ ಹೊಂದಾಣಿಕೆ ಅಂತಿಮ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಕಸರತ್ತು
|
2 |
+
ಬೆಂಗಳೂರು,ಫೆ.25-ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಕ್ಷೇತ್ರ ಹಂಚಿಕೆ ಬಹುತೇಕ ಅಂತಿಮಗೊಂಡಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಚುನಾವಣಾ ಪೂರ್ವ ಸಮೀಕ್ಷೆಯನ್ನು ಬಿಜೆಪಿ ನಡೆಸಿದ್ದು, ಸಮೀಕ್ಷಾ ವರದಿ ಆಧರಿಸಿ ಗೆಲ್ಲುವ ವರ್ಚಸ್ಸುಳ್ಳ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ಉಭಯ ಪಕ್ಷಗಳ ನಾಯಕರು ತೀರ್ಮಾನಿಸಿದ್ದಾರೆ. ಹೀಗಾಗಿ ಕ್ಷೇತ್ರ ಹಂಚಿಕೆಯಲ್ಲಿ ಅದಲು ಬದಲಾದರೂ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯನ್ನು ಎದುರಿಸಲು ನಿರ್ಧರಿಸಿದ್ದಾರೆ.
|
3 |
+
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಗರಿಷ್ಠ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂಬ ಗುರಿಯನ್ನು ಬಿಜೆಪಿ ಮತ್ತು ಜೆಡಿಎಸ್ ಹೊಂದಿವೆ. ಆ ನಿಟ್ಟಿನಲ್ಲಿ ಈಗಿನಿಂದಲೇ ಚುನಾವಣಾ ಸಿದ್ಧತೆಯನ್ನು ನಡೆಸಲು ಮುಂದಾಗುತ್ತಿವೆ. ರಾಜ್ಯ ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಚುನಾವಣಾ ಸಿದ್ಧತೆಯಲ್ಲಿ ಜೆಡಿಎಸ್ ಸಕ್ರಿಯವಾಗಲಿದೆ. ರಾಜ್ಯಸರ್ಕಾರದ ವಿರುದ್ಧ ಬಿಜೆಪಿಯೊಂದಿಗೆ ಸೇರಿ ಜಂಟಿ ಹೋರಾಟ ಮಾಡಲು ನಿರ್ಧರಿಸಲಾಗಿದೆ.
|
4 |
+
ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಕ್ಷೇತ್ರ ಹಂಚಿಕೆಯನ್ನು ಬಹುತೇಕ ಅಂತಿಮಗೊಳಿಸಿದ್ದಾರೆ. ಕೋಲಾರ, ಹಾಸನ, ಮಂಡ್ಯ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಡಲು ಸಮ್ಮತಿಸಿದ್ದಾರೆ. ಜೊತೆಗೆ ಕಲ್ಯಾಣ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದಲ್ಲಿ ಯಾವುದಾದರೂ ಒಂದು ಕ್ಷೇತ್ರವನ್ನು ಜೆಡಿಎಸ್ಗೆ ನೀಡುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಇನ್ನೊಂದು ಕ್ಷೇತ್ರ ಯಾವುದು ಎಂಬುದು ಸ್ಪಷ್ಟವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
|
5 |
+
ವಿದೇಶಿ ಹಡಗನ್ನು ಜಪ್ತಿ ಮಾಡುವಂತೆ ಒರಿಸ್ಸಾ ಹೈಕೋರ್ಟ್ ಆದೇಶ
|
6 |
+
ಪಕ್ಷದ ವತಿಯಿಂದ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಜೆಡಿಎಸ್ ನಾಯಕರು ಸಭೆ ನಡೆಸಿ ಶೀಘ್ರದಲ್ಲೇ ಅಂತಿಮಗೊಳಿಸಲಿದ್ದಾರೆ. ಆಯಾ ಕ್ಷೇತ್ರದ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಲು ನಿರ್ಧರಿಸಿದ್ದಾರೆ. ಹಾಸನ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣನವರೇ ಅಭ್ಯರ್ಥಿ ಎಂದು ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಕಟಿಸಿದ್ದಾರೆ. ಮಂಡ್ಯದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಹೆಸರು ಮುಂಚೂಣಿಯಲ್ಲಿದೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರೇ ಈ ಕ್ಷೇತ್ರದಿಂದ ಸ್ರ್ಪಧಿಸಬೇಕು ಎಂಬ ಒತ್ತಡವಿದೆ.
|
7 |
+
ಕೋಲಾರ ಮೀಸಲು ಕ್ಷೇತ್ರವಾಗಿರುವುದರಿಂದ ಅಭ್ಯರ್ಥಿ ಯಾರೆಂಬುದು ಇನ್ನೂ ಖಚಿತವಾಗಿಲ್ಲ. ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕುಮಾರಸ್ವಾಮಿಯವರು ಮಾಡಲಿದ್ದಾರೆ.ಒಟ್ಟಾರೆ ಲೋಕಸಭಾ ಚುನಾವಣೆಯನ್ನು ಬಿಜೆಪಿ-ಜೆಡಿಎಸ್ ಜಂಟಿಯಾಗಿ ಎದುರಿಸುವುದು, ಜೆಡಿಎಸ್ ಅಭ್ಯರ್ಥಿಗಳಿರುವ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲ ಪಡೆಯುವುದು, ಬಿಜೆಪಿ ಅಭ್ಯರ್ಥಿಗಳಿರುವ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲ ನೀಡುವ ಬಗ್ಗೆ ಕಾರ್ಯಕರ್ತರನ್ನು ಹುರಿದುಂಬಿಸುವ ಕಾರ್ಯದಲ್ಲಿ ಕುಮಾರಸ್ವಾಮಿ ಮಗ್ನರಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
|
eesanje/url_46_224_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಮಳೆ, ಬೆಳೆ ಜೊತೆ ಕಮಲ ಅರಳಲಿದೆ: ಮೈಲಾರ ಲಿಂಗೇಶ್ವರ ಭವಿಷ್ಯ..
|
2 |
+
ಕಡೂರು,ಫೆ.26- ಉತ್ತಮ ಮಳೆ,ಬೆಳೆಯಾಗಲಿದ್ದು ಕಮಲ ಅರಳಲಿದೆ ಎಂಬಾರ್ಥದಲ್ಲಿ ಮೈಲಾರಲಿಂಗೇಶ್ವರ ಸ್ವಾಮಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದಿದೆ. ಕಡೂರು ತಾಲೂಕಿನ ಜಿಗಣೆಹಳ್ಳಿ ಐತಿಹಾಸಿಕ ಮೈಲಾರಲಿಂಗೇಶ್ವರ ಸ್ವಾಮಿಯು ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿಗೆ ಭಕ್ತರು ಖುಷಿಪಟ್ಟಿದ್ದಾರೆ.
|
3 |
+
ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗಲೇ, ಮತ್ತೆ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯಲಿದೆ ಎಂಬರ್ಥದಲ್ಲಿ ಜತೆಗೆ, ಮಳೆ-ಬೆಳೆ ಚೆನ್ನಾಗಿ ಆಗಲಿದೆ ಎಂಬ ಆಶಾವಾದದ ನುಡಿ ಎಂದು ವುಖ್ಯಾನಿಸಲಾಗಿದೆ.
|
4 |
+
ವೀರಪ್ಪನ್ ಪುತ್ರಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿತ್ತು ಆರ್ಎಸ್ಎಸ್
|
5 |
+
ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಈ ಭಾಗದಲ್ಲಿ ಪ್ರಸಿದ್ಧಿ ಪಡೆದಿದೆ ಭವಿಷ್ಯ ಸಾಕಷ್ಡು ಭರಿ ನಿಜವಾಗಿದೆ. ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾಗಿದ್ದಾರೆ ದೇವರ ದರ್ಶನ ಪಡೆದು ಸತೋಷಪಟ್ಟಿದ್ದಾರೆ.
|
eesanje/url_46_224_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ವೀರಪ್ಪನ್ ಪುತ್ರಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿತ್ತು ಆರ್ಎಸ್ಎಸ್
|
2 |
+
ಬೆಂಗಳೂರು,ಫೆ.26- ಕಾಡುಗಳ್ಳ ವೀರಪ್ಪನ್ ಅವರ ಪುತ್ರಿ ವಿದ್ಯಾ ವೀರಪ್ಪನ್ ಇಂದು ವಕೀಲೆಯಾಗಿದ್ದು ತಮಿಳುನಾಡು ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ರಾಜಕೀಯ ಜೀವನಕ್ಕೂ ಕಾಲಿಟ್ಟಿದ್ದು ಯಶಸ್ವಿ ರಾಜಕಾರಣಿಯಾಗುವ ಎಲ್ಲ ಲಕ್ಷಣಗಳನ್ನು ತೋರಿಸಿದ್ದಾರೆ. ಕಾಡುಗಳ್ಳ ವೀರಪ್ಪನ್ ಅವರ ಪುತ್ರಿಯ ಈ ಯಶಸ್ಸಿಗೆ ಆರ್ಎಸ್ಎಸ್ ಕಾರಣ ಎನ್ನುವುದು ಇಲ್ಲಿ ಉಲ್ಲೇಖಾರ್ಹವಾದದ್ದು ಏಕೆಂದರೆ ವಿದ್ಯಾಳನ್ನು ದತ್ತು ಪಡೆದು ಲಾ ಓದಿಸಿದ ವನವಾಸಿ ಕಲ್ಯಾಣ ಆಶ್ರಮ ಆರ್ಎಸ್ಎಸ್ನ ಅಂಗಸಂಸ್ಥೆಯಾಗಿರುವುದು ಪ್ರಮುಖ ಕಾರಣವಾಗಿದೆ.
|
3 |
+
ಕಾಡುಗಳ್ಳನ ಪುತ್ರಿಯ ವಿದ್ಯಾಭ್ಯಾಸಕ್ಕೆ ಆರ್ಎಸ್ಎಸ್ ಅಂಗಸಂಸ್ಥೆ ಸಹಕರಿಸಿರುವ ವಿಷಯವನ್ನು ಅಮಿತ್ ಸಿಂಗ್ ರಾಜಾವತ್ ಎನ್ನುವರು ಎಕ್ಸ್ ಮಾಡಿದ್ದು ಅವರ ಈ ಪೋಸ್ಟ್ ಗೆ ಸಹಸ್ರಾರು ಸಂಖ್ಯೆಯ ಲೈಕ್ಗಳು ಬಂದಿರುವುದು ವಿಶೇಷ. ಬೆಂಗಳೂರಿನ ಲಾ ಕಾಲೇಜಿನಲ್ಲಿ ಐದು ವರ್ಷಗಳ ಪದವಿ ಪೂರ್ಣಗೊಳಿಸಿರುವ ವಿದ್ಯಾ ವೀರಪ್ಪನ್ ಇಂದು ತಮಿಳುನಾಡು ರಾಜಕಾರಣದಲ್ಲಿ ಬ್ಯುಸಿಯಾಗಿದ್ದು, ತಂದೆ ಮಾಡಿದ ತಪ್ಪಿಗೆ ಪ್ರಾಯಶ್ಚಿತವಾಗಿ ಜನಸೇವೆ ಮಾಡುವ ಗುರಿ ಇರಿಸಿಕೊಂಡಿದ್ದು ಮುಂಬರುವ ಚುನಾವಣೆಯಲ್ಲಿ ಸ್ರ್ಪಧಿಸಿ ಶಾಸಕರಾಗಿ ಹೊರಹೊಮ್ಮಿದರೂ ಆಶ್ಚರ್ಯಪಡುವಂತಿಲ್ಲ ಎಂದು ಆಶಾಭಾವ ವ್ಯಕ್ತಪಡಿಸಿದ್ದಾರೆ ಕೆಲವರು.
|
4 |
+
ಮೆಟ್ರೋದಲ್ಲಿ ರೈತನ ಪ್ರಯಾಣಕ್ಕೆ ತಡೆ: ಸಿಬ್ಬಂದಿ ವರ್ತನೆಗೆ ವ್ಯಾಪಕ ಆಕ್ರೋಶ
|
5 |
+
ವಿದ್ಯಾ ಮೂರನೇ ತರಗತಿ ಓದುತ್ತಿದ್ದಾಗ ತಂದೆ ವೀರಪ್ಪನ್ ಅವರನ್ನು ನೋಡಿದ ನೆನಪು ಮಾತ್ರ ಅವರಲ್ಲಿದೆ. ನನ್ನ ತಂದೆಯೊಂದಿಗೆ ಆಗ ಕೇವಲ 30 ನಿಮಿಷಗಳ ಕಾಲ ಮಾತನಾಡಿದ್ದು ನೆನಪಿದೆ ಉಳಿದಂತೆ ಅವರ ಯಾವುದೇ ನೆನಪು ನನ್ನಲ್ಲಿ ಉಳಿದಿಲ್ಲ ಎನ್ನುತ್ತಾರೆ ವಿದ್ಯಾ ವೀರಪ್ಪನ್.
|
6 |
+
ಇದೀಗ ಆರ್ಎಸ್ಎಸ್ ಅಂಗಸಂಸ್ಥೆಯಿಂದ ಸಹಾಯದಿಂದ ವಕೀಲರಾಗಿರುವ ವಿದ್ಯಾ ಅವರು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸುವ ಗುರಿಯನ್ನು ಇರಿಸಿಕೊಂಡಿದ್ದಾರಾದರೂ ಅವರ ಪ್ರಯತ್ನಕ್ಕೆ ಇನ್ನು ಫಲ ಸಿಕ್ಕಿಲ್ವಂತೆ. ನಾನು ಕಾಡುಗಳ್ಳ ವೀರಪ್ಪನ್ ಪುತ್ರಿ ಎಂದು ಜನ ನನ್ನನ್ನು ತಿರಸ್ಕರಿಸಿಲ್ಲ ನನಗೆ ಅವರಿಂದ ಪ್ರೀತಿ ಸಿಗುತ್ತಿದೆ ಅವರ ಋಣ ತೀರಿಸಲು ನನ್ನ ಕೈಲಾದ ಸೇವೆ ಮಾಡಬೇಕು ಎಂಬ ಗುರಿ ಇರಿಸಿಕೊಂಡಿದ್ದೇನೆ ಎಂದು ವಿದ್ಯಾ ತಿಳಿಸಿದ್ದಾರೆ.
|
7 |
+
ಇದರ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಸ್ಫೂರ್ತಿ ಪಡೆದು ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಕೇಸರಿ ಪಕ್ಷಕ್ಕೆ ನೆಲೆಯಿಲ್ಲದ ತಮಿಳುನಾಡಿನಲ್ಲಿ ಆ ಪಕ್ಷದ ಗೆಲುವಿಗೆ ಸಹಕರಿಸುವ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ವಿದ್ಯಾ ಹೇಳಿಕೊಂಡಿದ್ದಾರೆ.
|
8 |
+
ಸಿಎಂ – ಡಿಸಿಎಂ ಜೊತೆ ಜ���ಾರ್ಧನ ರೆಡ್ಡಿ ರಹಸ್ಯ ಮಾತುಕತೆ
|
9 |
+
ತಮಿಳುನಾಡು ಮತ್ತು ಕರ್ನಾಟಕದ ದಟ್ಟ ಅರಣ್ಯದಲ್ಲಿ ಕಾಡುಗಳ್ಳನಾಗಿದ್ದ ವೀರಪ್ಪನ್ ಕನ್ನಡದ ಖ್ಯಾತ ಚಿತ್ರನಟ ಡಾ.ರಾಜ್ಕುಮಾರ್ ಅವರನ್ನು ಅಪಹರಿಸಿ ಭಾರಿ ಸಂಚಲನ ಸೃಷ್ಟಿಸಿದ್ದ ಇಂತಹ ಕಾಡುಗಳ್ಳನನ್ನು ಎಸ್ಟಿಎಫ್ ಅಧಿಕಾರಿಗಳು 2014 ಅಕ್ಟೋಬರ್ 18ರಂದು ಹತ್ಯೆ ಮಾಡಿದ್ದರು.
|
eesanje/url_46_224_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿಎಂ – ಡಿಸಿಎಂ ಜೊತೆ ಜನಾರ್ಧನ ರೆಡ್ಡಿ ರಹಸ್ಯ ಮಾತುಕತೆ
|
2 |
+
ಬೆಂಗಳೂರು,ಫೆ.26- ರಾಜ್ಯಸಭೆ ಚುನಾವಣೆಯ ಮತದಾನಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಕೆಕೆಪಿಪಿ ರಾಜ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ಜನಾರ್ಧನ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಶಿವರಾಜ್ ತಂಗಡಗಿ ಅವರೊಂದಿಗೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿರುವ ಜನಾರ್ಧನ ರೆಡ್ಡಿ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ.
|
3 |
+
ಐತಿಹಾಸಿಕ ಆನೆಗುಂದಿ ಉತ್ಸವಕ್ಕೆ ಆಗಮಿಸಲು ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿದ್ದಾಗಿ ರೆಡ್ಡಿ ಹೇಳಿದ್ದರಾದರೂ ಭೇಟಿಯ ಹಿಂದೆ ರಾಜಕೀಯ ಉದ್ದೇಶ ಇರುವುದನ್ನು ಅಲ್ಲಗೆಳೆಯುವಂತಿಲ್ಲ.ನಾಳೆ ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕಾದ ಸಂಗ್ದತೆಯಲ್ಲಿರುವ ಕಾಂಗ್ರೆಸ್ಗೆ ಒಂದೊಂದು ಮತವು ಕೂಡ ಅಭ್ಯರ್ಥಿಗಳ ಸೋಲುಗೆಲುವಿನ ಹಣೆಬರಹವನ್ನು ತೀರ್ಮಾನಿಸುತ್ತದೆ.
|
4 |
+
ಸುರಪುರ ಶಾಸಕ ರಾಜ ವೆಂಕಟಪ್ಪ ನಾಯಕ್ ಹಠಾತ್ ನಿಧನದಿಂದ ಒಂದು ಮತದ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಇದೀಗ ಜನಾರ್ಧನ ರೆಡ್ಡಿಯನ್ನೇ ಆಪರೇಷನ್ ಹಸ್ತ ನಡೆಸಿರಬಹುದು ಎನ್ನಲಾಗುತ್ತಿದೆ.ಬಿಜೆಪಿಯಿಂದ ತುಸು ಅಂತರ ಕಾಯ್ದುಕೊಂಡಿರುವ ರೆಡ್ಡಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮತ ಹಾಕಬಹುದೆಂದು ಹೇಳಲಾಗುತ್ತಿದೆ.
|
5 |
+
ರಷ್ಯಾ ಸೇನೆಯಿಂದ ಭಾರತೀಯರ ಬಿಡುಗಡೆ
|
6 |
+
5ನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ಬೆಂಬಲಿತ ಕುಪೇಂದ್ರ ರೆಡ್ಡಿಯನ್ನು ಸೋಲಿಸಲೇಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದ್ದು, ನಾಲ್ವರು ಪಕ್ಷೇತರ ಶಾಸಕರಿಗೆ ಗಾಳ ಹಾಕಿದೆ. ಈಗಾಗಲೇ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ, ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದು, ಈಗ ರೆಡ್ಡಿ ಕೂಡ ಕೈಗೆ ಜೈ ಎನ್ನುವ ಸಾಧ್ಯತೆ ಇದೆ.
|
7 |
+
ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ರೆಡ್ಡಿ, ಇದೊಂದು ಸೌಹಾರ್ದಯುತ ಭೇಟಿ. ಆನೆಗುಂದಿಯಲ್ಲಿ ನಡೆಯುವ ಉತ್ಸವಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿಕೊಂಡಿದ್ದಾರೆ. ನಾನು ಇನ್ನು ಇದರ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದರು.
|
eesanje/url_46_224_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಮೆಟ್ರೋದಲ್ಲಿ ರೈತನ ಪ್ರಯಾಣಕ್ಕೆ ತಡೆ: ಸಿಬ್ಬಂದಿ ವರ್ತನೆಗೆ ವ್ಯಾಪಕ ಆಕ್ರೋಶ
|
2 |
+
ಬೆಂಗಳೂರು,ಫೆ.26- ರೈತರೊಬ್ಬರು ಕೊಳೆ ಬಟ್ಟೆ ಹಾಕಿದ್ದಾರೆ ಎಂಬ ಕಾರಣಕ್ಕೆ ಮೆಟ್ರೊ ಪ್ರಯಾಣಕ್ಕೆ ನಿರಾಕರಿಸಿದ ಭದ್ರತಾ ಸಿಬ್ಬಂದಿಗಳಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ರಾಜಾಜಿನಗರದಲ್ಲಿ ನಡೆದಿದ್ದು, ವ್ಯಾಪಕ ಆಕ್ರೋಶಗಳ ಬೆನ್ನಲ್ಲೇ ಬಿಎಂಆರ್ಸಿಎಲ್ ಭದ್ರತಾ ಮೇಲ್ವಿಚಾರಕರನ್ನು ಕೆಲಸದಿಂದ ವಜಾಗೊಳಿಸಿದೆ.
|
3 |
+
ಹಿರಿಯ ರೈತರೊಬ್ಬರು ಮೆಟ್ರೊದಲ್ಲಿ ಪ್ರಯಾಣಿಸಲು ರಾಜಾಜಿನಗರ ನಿಲ್ದಾಣಕ್ಕೆ ಆಗಮಿಸಿದರು. ಟಿಕೆಟ್ ಕೂಡ ಖರೀದಿಸಿದ್ದರು. ಆದರೆ ಅವರ ಬಟ್ಟೆ ಕೊಳೆಯಾಗಿದೆ, ತಲೆ ಮೇಲೆ ಗಂಟು ಹೊತ್ತುಕೊಂಡಿದ್ದಾರೆ. ಇತರ ಪ್ರಯಾಣಿಕರಿಗೆ ಮುಜುಗರವಾಗುತ್ತದೆ ಎಂಬ ಕಾರಣಕ್ಕೆ ರೈತರಿಗೆ ಪ್ರಯಾಣಿಸಲು ಭದ್ರತಾ ಸಿಬ್ಬಂದಿ ಅವಕಾಶ ನಿರಾಕರಿಸಿದರು.
|
4 |
+
ಇದನ್ನು ಗಮನಿಸಿದ ಸಹಪ್ರಯಾಣಿಕರು ಮಧ್ಯಪ್ರವೇಶಿಸಿ ಭದ್ರತಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ರೈತರು ತಂದಿರುವ ಗಂಟಿನಲ್ಲಿ ಬಟ್ಟೆ ಹೊರತುಪಡಿಸಿ ಬೇರೆ ಯಾವ ಅಪಾಯಕಾರಿ ವಸ್ತುಗಳೂ ಇಲ್ಲ. ಒಂದು ವೇಳೆ ಸುರಕ್ಷತೆಗೆ ಧಕ್ಕೆಯಾಗುವಂತ ವಸ್ತುಗಳಿದ್ದರೆ ಅದನ್ನು ಕಿತ್ತು ಬಿಸಾಕಿ ಅಥವಾ ಪ್ರಯಾಣಕ್ಕೆ ನಿರಾಕರಿಸಿ.ಬಟ್ಟೆ ಕೊಳೆಯಾಗಿದೆ ಎಂಬ ಕಾರಣಕ್ಕೆ ಅವರನ್ನು ಒಳಗೆ ಬಿಡುವುದಿಲ್ಲವೆಂದರೆ ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
|
5 |
+
ರಷ್ಯಾ ಸೇನೆಯಿಂದ ಭಾರತೀಯರ ಬಿಡುಗಡೆ
|
6 |
+
ಬೆಂಗಳೂರು ಮೆಟ್ರೊ ವಿವಿಐಪಿ ಸಾರಿಗೆ ವ್ಯವಸ್ಥೆ ಅಲ್ಲ. ನಾವು ತಣಮಣ ಹೊಳೆಯುವ ಬಟ್ಟೆಗಳನ್ನೇ ಧರಿಸಿದ್ದೇವೆ ಅಂದಮಾತ್ರಕ್ಕೆ ನಮಗೆ ಉಚಿತ ಪ್ರಯಾಣದ ಸೌಲಭ್ಯವಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರೈತರನ್ನು ಸಹ ಪ್ರಯಾಣಿಕರು ತಮ್ಮೊಂದಿಗೆ ಕರೆದುಕೊಂಡು ಹೋಗಲು ಮುಂದಾದಾಗ ಸಿಬ್ಬಂದಿ ಮತ್ತೆ ಅಡ್ಡಿಪಡಿಸಿದ್ದಾರೆ. ಈ ವೇಳೆ ಹಲವಾರು ಸಾರ್ವಜನಿಕರು ಮಧ್ಯಪ್ರವೇಶಿಸಿದ್ದು, ಸಿಬ್ಬಂದಿಗಳ ವರ್ತನೆಗೆ ಕಿಡಿಕಾರಿದ್ದಾರೆ.
|
7 |
+
ಕೊನೆಗೆ ಸಾರ್ವಜನಿಕರ ಒತ್ತಡಕ್ಕೆ ಮಣಿದು ಸಿಬ್ಬಂದಿ ರೈತರ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದರ ಬೆನ್ನಲ್ಲೇ ಸಿಬ್ಬಂದಿಗಳ ವರ್ತನೆಯನ್ನು ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ವ್ಯಾಪಕ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭದ್ರತಾ ಸಿಬ್ಬಂದಿಗಳ ವರ್ತನೆಗೆ ಖಂಡನೆ ವ್ಯಕ್ತವಾಗಿವೆ.ಎಚ್ಚೆತ್ತುಕೊಂಡ ಬಿಎಂಆರ್ಸಿಎಲ್ ನಮ್ಮ ಮೆಟ್ರೊ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮ ವಿಷಾದಿಸುತ್ತದೆ ಎಂದು ತಿಳಿಸಿದೆ.
|
eesanje/url_46_224_6.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯಿಂದ ಸುಮಲತಾ ಅಂಬರೀಶ್ ಬೀದಿಪಾಲು ; ಲಕ್ಷ್ಮಣ್
|
2 |
+
ಬೆಂಗಳೂರು,ಫೆ.25- ಬಿಜೆಪಿಯವರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ರ ರಾಜಕೀಯ ಭವಿಷ್ಯವನ್ನು ಸಂಪೂರ್ಣವಾಗಿ ಹಾಳು ಮಾಡಿ ಬೀದಿಪಾಲು ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ದೂರಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷವೂ ಪ್ರಧಾನಿಯಾಗಿರಬೇಕು ಎಂದು ಭಾಷಣ ಮಾಡಿಕೊಂಡು ಬರುತ್ತಿದ್ದರು. ಈಗ ಅವರನ್ನೇ ಬಿಜೆಪಿ ಕೈಬಿಡುವ ಸ್ಥಿತಿ ಇದೆ. ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾದರೆ, ಸುಮಲತಾಗೆ ಕ್ಷೇತ್ರ ಇಲ್ಲವಾಗುತ್ತದೆ. ಅವರಿಗೆ ಬೇರೆ ಯಾವ ಪಕ್ಷವೂ ಟಿಕೆಟ್ ಕೊಡುವ ಲಕ್ಷಣಗಳಿಲ್ಲ ಎಂದರು.
|
3 |
+
ಕಾಂಗ್ರೆಸ್ಗೆ ಬರುತ್ತಾರೆಂಬ ವದಂತಿಗಳು ಕೇಳಿಬರುತ್ತಿವೆ. ಮಂಡ್ಯ ಕ್ಷೇತ್ರಕ್ಕೆ ನಮ್ಮ ಅಭ್ಯರ್ಥಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ. ಈ ಹಂತದಲ್ಲಿ ಸುಮಲತಾ ಅವರನ್ನು ಕರೆತಂದು ಟಿಕೆಟ್ ನೀಡುವ ಸಾಧ್ಯತೆ ನಮ್ಮಲ್ಲಿಲ್ಲ ಎಂದು ಹೇಳಿದರು.
|
4 |
+
ಬಿಜೆಪಿಯವರು ಅಯೋಧ್ಯೆ-ಮೈಸೂರು ನಡುವಿನ ರೈಲಿಗೆ ಬೆಂಕಿ ಹಚ್ಚುವುದಾಗಿ ಅಲ್ಪಸಂಖ್ಯಾತ ಯುವಕರು ಬೆದರಿಕೆ ಹಾಕಿದ್ದಾರೆ ಎಂದು ಬಾಯಿ ಬಡಿದುಕೊಳ್ಳುತ್ತಿರುವುದು ಕಂಡುಬರುತ್ತಿದೆ. ಆ ರೀತಿ ಬೆದರಿಕೆ ಹಾಕಿರುವ ಯಾರೂ ಈವರೆಗೆ ಸಿಕ್ಕಿಬಿದ್ದಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಟೀಕೆ ಮಾಡುತ್ತಿದೆ. ರೈಲು ಹಾಗೂ ಅದರ ಹಳಿಗಳ ಮೇಲೆ ನಡೆಯುವ ಯಾವುದೇ ಕೃತ್ಯಗಳಿಗೆ ರೈಲ್ವೆ ಪೊಲೀಸರೇ ಹೊಣೆಗಾರರು. ರೈಲ್ವೆ ಇಲಾಖೆ ಸಂಪೂರ್ಣ ಕೇಂದ್ರ ಸರ್ಕಾರದ ಅೀಧಿನದಲ್ಲಿದೆ. ಅಲ್ಲಿ ನಡೆದ ಕೃತ್ಯಕ್ಕೆ ರಾಜ್ಯಸರ್ಕಾರವನ್ನು ದೂಷಿಸುವುದು ರಾಜಕೀಯ ಷಡ್ಯಂತ್ರ ಎಂದರು.
|
5 |
+
ನ್ಯೂಯಾರ್ಕ್ನಲ್ಲಿ ಭಾರತೀಯ ಪ್ರಜೆ ಸಾವು
|
6 |
+
ಬಿಜೆಪಿಯವರು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಸತತ ಪ್ರಯತ್ನ ಮಾಡುತ್ತಿದ್ದಾರೆ. ಮಂಗಳೂರಿನ ಜೆರೇಸಾ ಶಾಲೆಯ ವಿಚಾರವನ್ನು ಮುಂದಿಟ್ಟುಕೊಂಡು ಗಲಭೆ ಎಬ್ಬಿಸಿದ್ದಾರೆ. ನಿನ್ನೆ ಹುಣಸೂರಿನಲ್ಲಿ ಈಡಿಗ ಸಮುದಾಯದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪಿರಿಯಾಪಟ್ಟಣದ ದರ್ಗಾವೊಂದರಲ್ಲಿ ದೇವರ ಮೂರ್ತಿಯಿಟ್ಟು ಗಲಭೆ ಸೃಷ್ಟಿಸುವ ಯತ್ನ ನಡೆಯುತ್ತಿದೆ ಎಂದು ಹೇಳಿದರು.
|
7 |
+
ಸಿದ್ದರಾಮಯ್ಯ ಅವರ ಸರ್ಕಾರ 1.9 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಆರೋಪ ಮಾಡಿದ್ದಾರೆ. ಸುಳ್ಳು ಹೇಳಲು ಒಂದು ಮಿತಿಯಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು 4 ಲಕ್ಷ ಕೋಟಿ ರೂ. ಸಾಲ ಮಾಡಿವೆ. ಸಿದ್ದರಾಮಯ್ಯ ಕಳೆದ 9 ತಿಂಗಳ ತಮ್ಮ ಅಧಿಕಾರವಯಲ್ಲಿ 1 ರೂ. ಕೂಡ ಸಾಲ ಮಾಡಿಲ್ಲ. 2024-25ನೇ ಸಾಲಿನ ಬಜೆಟ್ನಲ್ಲಿ 1.05 ಲಕ್ಷ ಕೋಟಿ ರೂ. ಸಾಲ ಮಾಡುವ ಅವಕಾಶವನ್ನು ಸೃಷ್ಟಿಸಿಕೊಂಡಿದ್ದಾರೆ ಎಂದು ಹೇಳಿದರು.
|
eesanje/url_46_224_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕೇಂದ್ರ ಸಚಿವರಾದ ಜೈಶಂಕರ್- ನಿರ್ಮಲಾ ಕರ್ನಾಟಕದಿಂದ ಸ್ಪರ್ಧೆ..?
|
2 |
+
ಬೆಂಗಳೂರು,ಫೆ.25- ಕೇಂದ್ರದ ಪ್ರಭಾವಿ ಸಚಿವರಾಗಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಬಿಜೆಪಿ ಭದ್ರಕೋಟೆಯ ಕ್ಷೇತ್ರಗಳಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಸಾಧ್ಯತೆ ದಟ್ಟವಾಗಿದೆ.
|
3 |
+
ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸಚಿವರಾಗಿರುವ ಈ ಇಬ್ಬರೂ ಸಚಿವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಿ, ನೇರ ಚುನಾವಣೆ ಮೂಲಕವೇ ಲೋಕಸಭೆಗೆ ಆಯ್ಕೆ ಮಾಡುವ ಬಗ್ಗೆ ಬಿಜೆಪಿ ಹೈಕಮಾಂಡ್ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಈ ಸಂಬಂಧ ಸಮೀಕ್ಷೆ ನಡೆಸಿ ಆಂತರಿಕ ವರದಿ ಪಡೆಯಲಾಗುತ್ತಿದೆ ಎಂದು ತಿಳಿದುಬಂದಿದೆ. ರಾಜ್ಯದ 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲಲೇಬೇಕೆಂಬ ಗುರಿ ಇಟ್ಟುಕೊಂಡಿರುವ ಬಿಜೆಪಿ, ಉತ್ತಮ ರಾಜತಾಂತ್ರಿಕರೂ ಆಗಿರುವ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದಿಂದ ಟಿಕೆಟ್ ನೀಡಿ ಲೋಕಸಭೆ ಚುನಾವಣೆಗೆ ರಂಗು ನೀಡಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.
|
4 |
+
ಕರ್ನಾಟಕ ಸಿಜೆ ಆಗಿ ನ್ಯಾ.ಅಂಜಾರಿಯಾ ಪ್ರಮಾಣ ಸ್ವೀಕಾರ
|
5 |
+
ಕರಾವಳಿ ಕ್ಷೇತ್ರದಿಂದ ಸ್ಪರ್ಧೆ?:ನಿರ್ಮಲಾ ಸೀತಾರಾಮನ್ ಅವರನ್ನು ಪಕ್ಷದ ಭದ್ರಕೋಟೆಯಾಗಿರುವ ಕರಾವಳಿಯ ಕ್ಷೇತ್ರಗಳಿಂದ ಕಣಕ್ಕಿಳಿಸಿದರೆ ಹೇಗೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ದಕ್ಷಿಣಕನ್ನಡ, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಅಥವಾ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಿಂದ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
|
6 |
+
ನಿರ್ಮಲಾ ಸೀತಾರಾಮನ್ ಈಗಾಗಲೇ ಕರಾವಳಿ ಭಾಗದ ಉಡುಪಿ ಜೊತೆ ನಿಕಟ ಸಂಪರ್ಕ ಹೊಂದಿದವರಾಗಿದ್ದಾರೆ. ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಬೆಂಗಳೂರಿನೊಂದಿಗೂ ನಂಟು ಹೊಂದಿದ್ದಾರೆ. ಜೈಶಂಕರ್ ಅವರು ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಅಭ್ಯಸಿಸುವ ಮೂಲಕ ಬೆಂಗಳೂರಿನ ಜೊತೆ ಸಂಪರ್ಕ ಹೊಂದಿದ್ದಾರೆ. ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಯಾವುದಾದರೂ ಒಂದು ಕಡೆಯಿಂದ ಅವರನ್ನು ಚುನಾವಣೆಗೆ ನಿಲ್ಲಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಸಮಾಲೋಚನೆ ನಡೆಯುತ್ತಿದೆ ಎಂದು ಹೇಳಲಾಗಿದೆ.
|
7 |
+
ಬೇಸಿಗೆಗೂ ಮುನ್ನವೇ ಜಲಕ್ಷಾಮದ ಭೀತಿ : ಎಲ್ಲೆಡೆ ಭುಗಿಲೇಳುತ್ತಿರುವ ನೀರಿನ ಹಾಹಾಕಾರ
|
8 |
+
ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸಚಿವರಾಗಿರುವವರನ್ನು ಲೋಕಸಭೆಗೆ ಆಯ್ಕೆ ಮಾಡುವ ಉದ್ದೇಶ ಬಿಜೆಪಿ ಹೈಕಮಾಂಡ್ಗಿದೆ. ಈ ಕಾರಣದಿಂದಲೇ ಕೇಂದ್ರ ಸಚಿವರಾದ ಉದ್ಯಮಿ ಆರ್.ಸಿ.ಚಂದ್ರಶೇಖರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮರು ಆಯ್ಕೆ ಮಾಡದೇ, ಲೋಕಸಭೆಗೆ ಸ್ರ್ಪಧಿಸಲು ಸೂಚಿಸಲಾಗಿದೆ ಎಂದು ತಿಳಿದುಬಂದಿದ���. ಆರ್.ಸಿ.ಚಂದ್ರಶೇಖರ್ ಅವರು ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಕೇರಳದ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗಿಳಿಯುವ ಬಗ್ಗೆ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
|
9 |
+
ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ರಾಜ್ಯದಿಂದಲೇ ಸ್ರ್ಪಸುವುದು ಅಂತಿಮವಾದರೆ ಬಿಜೆಪಿ ಭದ್ರಕೋಟೆಗಳಿಂದ ಗೆದ್ದು ಹಾಲಿ ಸಂಸದರಾಗಿರುವ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್, ನಳೀನ್ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಸಿಎಂ ಸದಾನಂದ ಗೌಡ ಅವರ ಸ್ಪರ್ಧೆಗೆ ಕುತ್ತು ಬರುವ ಸಂಭವವಿದೆ ಎನ್ನಲಾಗಿದೆ.
|
eesanje/url_46_224_8.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬೇಸಿಗೆಗೂ ಮುನ್ನವೇ ಜಲಕ್ಷಾಮದ ಭೀತಿ : ಎಲ್ಲೆಡೆ ಭುಗಿಲೇಳುತ್ತಿರುವ ನೀರಿನ ಹಾಹಾಕಾರ
|
2 |
+
ಬೆಂಗಳೂರು,ಫೆ.25- ಮಳೆ ಕೊರತೆಯಿಂದಾಗಿ ಒಂದೆಡೆ ಭೀಕರ ಬರ ಪರಿಸ್ಥಿತಿ ಇದ್ದರೆ ಮತ್ತೊಂದೆಡೆ ಬೇಸಿಗೆ ಆರಂಭಕ್ಕೂ ಮುನ್ನ ಎದುರಾಗಿರುವ ಜಲಕ್ಷಾಮ ಆತಂಕ ಮೂಡಿಸಿದೆ. ಮಹಾನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಬಯಲುಸೀಮೆಯಲ್ಲಷ್ಟೇ ಅಲ್ಲದೆ ಕರಾವಳಿ, ಮಲೆನಾಡು ಭಾಗದಲ್ಲೂ ನೀರಿನ ಕೊರತೆ ವರದಿಯಾಗುತ್ತಿರುವುದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ.
|
3 |
+
ಕಳೆದ ಜನವರಿಯಲ್ಲಿ ಸುಮಾರು 2000 ಗ್ರಾಮಗಳಲ್ಲಿ ನೀರಿನ ಕೊರತೆಯಾಗಲಿದೆ ಎಂಬ ಮುನ್ಸೂಚನಾ ವರದಿ ಇತ್ತು. ಅಂತರ್ಜಲಮಟ್ಟ ಕುಸಿತದಿಂದಾಗಿ ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಹೊಸ ನೀರಿನ ಸೆಲೆ ಹಾಗೂ ಮೂಲಗಳ ಶೋಧ, ಬೋರ್ವೆಲ್ಗಳನ್ನು ಕೊರೆಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಪಂಚಖಾತ್ರಿ ಯೋಜನೆಗಳ ಜೊತೆಗೆ ಬರದಿಂದ ಎದುರಾಗಿರುವ ಹೆಚ್ಚುವರಿ ಆರ್ಥಿಕ ಹೊರೆ ಸರ್ಕಾರವನ್ನು ಹೈರಾಣು ಮಾಡಿದೆ. ಇನ್ನು ಫೆಬ್ರವರಿ ತಿಂಗಳಿನಲ್ಲೇ ಬಿಸಿಲ ಧಗೆ ತೀವ್ರಗೊಳ್ಳುತ್ತಿದೆ. ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ.
|
4 |
+
ಬೆಂಗಳೂರಿನಲ್ಲಿ ಅಪಾಟ್ಮೆಂಟ್ಗಳ ಜನ ಕೂಡ ಬಿಂದಿಗೆ ಹಿಡಿದು ಸಾರ್ವಜನಿಕ ನಲ್ಲಿಗಳ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಬಂದೊದಗಿದೆ. ಕಾವೇರಿ ನೀರಾವರಿ ನೀರು ನಿಯಂತ್ರಣ ಸಮಿತಿ ಹಾಗೂ ನೀರು ನಿರ್ವಹಣಾ ಮಂಡಳಿಗಳ ಆದೇಶಗಳ ಅನುಸಾರ ತಮಿಳುನಾಡಿಗೆ ಪದೇ ಪದೇ ಕಾವೇರಿ ನೀರು ಹರಿಸಲಾಗಿತ್ತು.
|
5 |
+
ಪರಿಣಾಮ ಪ್ರಸ್ತುತ ಕೆಆರ್ಎಸ್ನಲ್ಲಿ 16.32 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಗೆ 3ಂ.67 ನೀರಿನ ಸಂಗ್ರಹವಿತ್ತು . ಪ್ರಸ್ತುತ ಜಲಾಶಯದ ಒಟ್ಟು ಸಾಮಥ್ರ್ಯದಲ್ಲಿ ಶೇ.33ರಷ್ಟು ಮಾತ್ರ ನೀರಿದೆ.ಬೆಂಗಳೂರಿನ ಕುಡಿಯುವ ನೀರಿಗಾಗಿ 19 ಟಿಎಂಸಿಯನ್ನು ಕಾಯ್ದಿರಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಜಲಾಶಯದಲ್ಲಿ ಸಂಗ್ರಹ ಇರುವುದೇ 16 ಟಿಎಂಸಿ ಆಗಿರುವುದರಿಂದ ಇನ್ನು ಮೂರು ಟಿಎಂಸಿ ಕೊರತೆ ಕಂಡುಬಂದಿದೆ.
|
6 |
+
ಕರ್ನಾಟಕ ಸಿಜೆ ಆಗಿ ನ್ಯಾ.ಅಂಜಾರಿಯಾ ಪ್ರಮಾಣ ಸ್ವೀಕಾರ
|
7 |
+
ಮಳೆಗಾಲ ಶುರುವಾಗುವ ಜೂನ್ವರೆಗೂ ಇರುವ ನೀರನ್ನು ಸರಿದೂಗಿಸಲು ಜಲಮಂಡಳಿ ಪ್ರಯಾಸಪಡುತ್ತಿದೆ. ಅದಕ್ಕಾ ಮೂರ್ನಾಲ್ಕು ದಿನಗಳಿಗೊಮ್ಮೆ ಅರ್ಧ ಗಂಟೆ ಮಾತ್ರ ನೀರು ಬಿಡಲಾಗುತ್ತಿದೆ. ಕೊಳವೆ ಬಾವಿಗಳು ಕೂಡ ಬತ್ತಿ ಹೋಗಿರುವುದರಿಂದ ಜಲಕ್ಷಾಮ ಭೀಕರವಾಗಿದೆ. ಪರಿಸ್ಥಿತಿಯ ಲಾಭ ಪಡೆದ ಟ್ಯಾಂಕರ್ ಮಾಫಿಯಾ ದುಪ್ಪಟ್ಟು ದರ ಏರಿಕೆಮಾಡಿದೆ.
|
8 |
+
ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೊಳಗಾಗಿ ಪರದಾಡುತ್ತಿದ್ದು, ಅವರಿಗೆ ನೀರಿನ ಹೆಚ್ಚುವರಿ ಹೊರೆ ಕೂಡ ಹೆಗಲು ಭಾರ ಎನ್ನಿಸುವಂತಾಗಿದೆ. ಕಾವೇರಿ ನದಿಪಾತ್ರದ 4 ಜಲಾಶಯಗಳಲ್ಲಿ ಕಳೆದ ಇದೇ ವರ್ಷಕ್ಕೆ 67 ಟಿಎಂಸಿ ನೀರಿತ್ತು. ಪ್ರಸ್ತುತ 45.34 ಟಿಎಂಸಿ ಮಾತ್ರ ನೀರಿದೆ. ಶೇ.60ರಷ್ಟು ಕೊರತೆ ದೆ. ಇನ್ನು ಮಲೆನಾಡು ಭಾಗದ ಲಿಂಗನಮಕ್ಕಿ, ಸೂಫ, ವರಾಹಿ ಜಲಾಶಯಗಳಲ್ಲಿ ಕಳೆದ ವರ್ಷ 155 ಟಿಎಂಸಿ ಇತ್ತು. ಪ್ರಸ್ತುತ 109 ಟಿಎಂಸಿ ಮಾತ್ರ ಲಭ್ಯವಿದೆ.
|
9 |
+
ಕಲ್ಯಾಣ ಕರ್ನಾಟಕ ಭಾಗದ ಜಲಮೂಲವಾಗಿರುವ ಕೃಷ್ಣ ನದಿಪಾತ್ರದ ಜಲಾಶಯಗಳಲ್ಲಿ ಕಳೆದ ವರ್ಷ 215 ಟಿಎಂಸಿ ಇದ್ದರೆ ಈ ವರ್ಷ 148 ಟಿಎಂಸಿ ಮಾತ್ರ ಬಾಕಿ ಇದೆ. ಬಯಲುಸೀಮೆಯ ವಾಣಿವಿಲಾಸ ಸಾಗರದಲ್ಲಿ ಕಳೆದ ವರ್ಷಕ್ಕಿಂತಲೂ 9 ಟಿಎಂಸಿ ಕೊರತೆ ನೀಡಿದೆ.
|
10 |
+
ಮಹಾನಗರಿಗಳು ಹಾಗೂ ನಗರ ಪ್ರದೇಶಗಳಲ್ಲಿ ನೀರಿನ ಅಭಾವ ಒಂದೆಡೆಯಾದರೆ ಗ್ರಾಮೀಣ ಪ್ರದೇಶದಲ್ಲಿ ಜನಜಾನುವಾರುಗಳು ನೀರಿಲ್ಲದೆ ಪರದಾಡುವಂತಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನ ಮಧ್ಯಂತರದಲ್ಲಿ ಮಳೆ ಸುರಿದು ಕೆರೆಕಟ್ಟೆಗಳು ತುಂಬಿಕೊಳ್ಳದೆ ಇದ್ದರೆ ಜನ ನೀರಿಗಾಗಿ ಒದಾಡುವುದಲ್ಲದೇ ಮುಂದಿನ ಲೋಕಸಭೆ ಚುನಾವಣೆಗೆ ಇದು ಬಹುಚರ್ಚಿತ ವಿಷಯವಾಗುವ ಸಾಧ್ಯತೆ ಇದೆ.
|
11 |
+
ನಡು ರಸ್ತೆಯಲ್ಲೇ ಯುವಕನ ಭೀಕರ ಕೊಲೆ
|
12 |
+
ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ.ಯಾವುದೇ ಸಮಸ್ಯೆಗಳಿಲ್ಲ ಎಂಬ ಸ್ಪಷ್ಟನೆಗಳು ಪದೇ ಪದೇ ಕೇಳಿಬರುತ್ತಿವೆ. ಮೇಲಿಂದ ಮೇಲೆ ಸಭೆಗಳು ನಡೆಯುತ್ತಿದ್ದು, ಸಮಸ್ಯೆಗೆ ಅವಕಾಶ ಕೊಡುವುದಿಲ್ಲ ಎಂಬ ಆಶ್ವಾಸನೆಗಳು ಜರುಯುತ್ತಿವೆ. ಆದರೆ ಜಲಾಶಯಗಳಲ್ಲೂ ನೀರಿಲ್ಲ. ಅಂತರ್ಜಲದಲ್ಲೂ ನೀರಿಲ್ಲದೆ ಇರುವಾಗ ಪೂರೈಕೆ ಮಾಡುವುದಾದರೂ ಎಲ್ಲಿಂದ ಎಂಬ ಪ್ರಶ್ನೆಗಳು ಎದುರಾಗಿವೆ.ನೀರು ಪೂರೈಕೆಯ ಸವಾಲನ್ನು ಸಮರ್ಥವಾಗಿ ನಿಭಾಯಿಸದೆ ಇದ್ದರೆ ಭವಿಷ್ಯದಲ್ಲಿ ಬರಗಾಲಕ್ಕಿಂತಲೂ ನೀರಿನ ಬವಣೆಯೇ ತೀವ್ರವಾಗಿ ಕಾಡುವ ಆಂತಕವಿದೆ.
|
eesanje/url_46_224_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಕರ್ನಾಟಕ ಸಿಜೆ ಆಗಿ ನ್ಯಾ.ಅಂಜಾರಿಯಾ ಪ್ರಮಾಣ ಸ್ವೀಕಾರ
|
2 |
+
ಬೆಂಗಳೂರು,ಫೆ.25- ಕರ್ನಾಟಕ ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ ಗೌಪ್ಯತೆ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಿದರು. ಅನಂತರ ಕಡತಗಳಿಗೆ ಸಹಿ ಹಾಕಿ ವಿಪಿನ್ ಚಂದ್ರ ಅಧಿಕಾರ ಸ್ವೀಕರಿಸಿದರು.
|
3 |
+
ಮನೆ ಬಾಗಿಲಿಗೆ ಇ – ಸ್ಟ್ಯಾಂಪ್ : ಸದ್ಯದಲ್ಲೇ ಸರ್ಕಾರಿ ವೆಬ್ಸೈಟ್ ಆರಂಭ
|
4 |
+
ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಜ್ಯಪಾಲರು, ಮುಖ್ಯಮಂತ್ರಿಯಾದಿಯಾಗಿ ಗಣ್ಯರು ನೂತನ ನ್ಯಾಯಮೂರ್ತಿಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಕಾರ್ಯಕ್ರಮ ನಿರೂಪಿಸಿದರು.
|
eesanje/url_46_225_1.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಸಭಾ ಚುನಾವಣೆಗೆ ಮೂರು ಪಕ್ಷಗಳಲ್ಲೂ ತಂತ್ರ-ಪ್ರತಿತಂತ್ರ
|
2 |
+
ಬೆಂಗಳೂರು,ಫೆ.25- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕೂ ಸ್ಥಾನಗಳಿಗೆ ಫೆ.27 ರಂದು ನಡೆಯಲಿರುವ ದ್ವೈ ವಾರ್ಷಿಕ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಅವಕಾಶವಾಗದಂತೆ ಕಟ್ಟೆಚ್ಚರ ವಹಿಸುವ ಮೂರೂ ರಾಜಕೀಯ ಪಕ್ಷಗಳು ವಿಪ್ ಜಾರಿ ಮಾಡುವ ಸಾಧ್ಯತೆ ಇದೆ. ಚುನಾವಣಾ ಕಣದಲ್ಲಿ ಕಾಂಗ್ರೆಸ್ನಿಂದ ಮೂವರು ಬಿಜೆಪಿ ಹಾಗೂ ಜೆಡಿಎಸ್ನಿಂದ ತಲಾ ಒಬ್ಬ ಅಭ್ಯರ್ಥಿಗಳು ಇದ್ದಾರೆ. ಮಂಗಳವಾರ ನಡೆಯಲಿರುವ ಮತದಾನದಲ್ಲಿ ಅಡ್ಡಮತದಾನವಾಗಬಾರದು ಎಂಬ ಕಾರಣಕ್ಕೆ ನಾನಾ ರೀತಿಯ ರಣತಂತ್ರಗಳನ್ನು ಅನುಸರಿಸಲಾಗುತ್ತಿದೆ.
|
3 |
+
ಆಡಳಿತಾರೂಢ ಕಾಂಗ್ರೆಸ್ನಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕೇನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಬಯಸಿದ್ದಾರೆ. ಕಾಂಗ್ರೆಸ್ನ ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸಿರ್ ಹುಸೇನ್ ಮರು ಆಯ್ಕೆಗೆ ಕಣದಲ್ಲಿದ್ದಾರೆ. ಬಿಜೆಪಿಯಿಂದ ನಾರಾಯಣ ಸ ಬಾಂಡಗೆ, ಜೆಡಿಎಸ್ನಿಂದ ರಾಜ್ಯಸಭೆಯ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
|
4 |
+
ಕಾಂಗ್ರೆಸ್ 135 ಸ್ಥಾನಗಳನ್ನು ಹೊಂದಿದ್ದು, ಮೂವರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳುವ ಅವಕಾಶ ಹೊಂದಿದೆ. ಆದರೂ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಇಚ್ಛಿಸದ ನಾಯಕರು ಪಕ್ಷೇತರರಾದ ಜನಾರ್ಧನರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಲತಾ ಮಲ್ಲಿಕಾರ್ಜುನ, ಪುಟ್ಟಸ್ವಾಮಿಗೌಡ ಅವರನ್ನು ಸಂಪರ್ಕದಲ್ಲಿಟ್ಟುಕೊಂಡು ಕಾಂಗ್ರೆಸ್ಗೆ ಮತ ಹಾಕುವಂತೆ ಮನವೊಲಿಸುತ್ತಿದ್ದಾರೆ.
|
5 |
+
ಆನೆ ದಾಳಿಯಿಂದ ಜೀವ ಹಾನಿ: ಕರ್ನಾಟಕಕ್ಕೆ ಮೊದಲ ಸ್ಥಾನ
|
6 |
+
ಕಾಂಗ್ರೆಸ್ಗೆ ಈ ಹಿಂದೆ ವಿಧಾನಪರಿಷತ್ ಚುನಾವಣೆಗಳಲ್ಲಿ ಅಡ್ಡಮತದಾನದ ಬಿಸಿ ತಾಗಿದೆ. ಈ ಬಾರಿ ಹೈಕಮಾಂಡ್ ಅಜಯ್ ಮಕೇನ್ ಅವರನ್ನು ಗೆಲ್ಲಿಸಿಕೊಳ್ಳಲೇಬೇಕೆಂದು ಸೂಚನೆ ನೀಡಿದೆ. ಅದರ ಜೊತೆಗೆ ಯಾವುದೇ ಒಬ್ಬ ಅಭ್ಯರ್ಥಿಗೆ ಹಿನ್ನಡೆಯಾದರೂ ಅದು ರಾಜಕೀಯ ಸ್ಥಿತ್ಯಂತರಿಗಳಿಗೆ ಕಾರಣವಾಗಲಿದೆ.ಈ ಹಿಂದೆ ಮಹಾರಾಷ್ಟ್ರದಲ್ಲಿ ರಾಜ್ಯಸಭೆ ಚುನಾವಣೆ ವೇಳೆಯಲ್ಲಿ ರಾಜಕೀಯ ವಿಪ್ಲವಗಳು ನಡೆದು ಕಾಂಗ್ರೆಸ್, ಶ್ರೀಸೇನೆ, ಎನ್ಸಿಪಿ ಸಂಯುಕ್ತದ ಮಹಾ ವಿಕಾಸ ಅಘಾಡಿ ಸರ್ಕಾರ ಪತನವಾಗಿತ್ತು. ಆ ಕಹಿ ಅನುಭವದ ಆಧಾರದ ಮೇಲೆ ಕಾಂಗ್ರೆಸ್ ನಾಯಕರು ಅಗತ್ಯಕ್ಕಿಂತಲೂ ಹೆಚ್ಚಿನ ಮುತುವರ್ಜಿ ವಹಿಸಿ ರೆಸಾರ್ಟ್ ರಾಜಕೀಯದ ಮೊರೆ ಹೋಗಿದ್ದಾರೆ.
|
7 |
+
ಯಾವುದೇ ಸಂದರ್ಭದಲ್ಲಿ ಸಣ್ಣ ಅವಕಾಶ ಸಿಕ್ಕರೂ ಸರ್ಕಾರಕ್ಕೆ ಮುಳುವಾಗುವಂತಹ ಬೆಳವಣಿಗೆಗಳಾಗುವ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಪ್ರತಿಪಕ್ಷಗಳು ರಣತಂತ್ರ ರೂಪಿಸುವಲ್ಲಿ ನಿರತವಾಗಿವೆ. ಇದಕ್ಕೆ ಅವಕಾಶ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಅಖಾಡಕ್ಕೆ ಇಳಿದಿದ್ದಾರೆ.
|
8 |
+
ನಾಳೆ ವಿಧಾನಮಂಡಲ ಅಧಿವೇಶನದ ಬಳಿಕ ಬೆಂ��ಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಅದರಲ್ಲಿ ಯಾವ ಶಾಸಕರು, ಯಾರಿಗೆ ಮತ ಚಲಾಯಿಸಬೇಕು ಎಂಬ ಸೂಚನೆ ನೀಡಲಾಗುತ್ತದೆ. ಪ್ರಥಮ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಹಾಕಬೇಕು ಹಾಗೂ ದ್ವಿತೀಯ ಪ್ರಾಶಸ್ತ್ಯ ಮತವನ್ನು ಯಾವ ಅಭ್ಯರ್ಥಿಗೆ ಹಾಕಬೇಕು ಎಂಬ ತರಬೇತಿ ನೀಡಲಾಗುತ್ತದೆ.
|
9 |
+
ಅದರಂತೆ ಮಂಗಳವಾರ ನಡೆಯುವ ಮತದಾನದಲ್ಲಿ ಆಡಳಿತಾರೂಢ ಶಾಸಕರು ಆಯಾ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಸೂಚಿಸಲಾಗುತ್ತದೆ. ಪ್ರತಿ ಅಭ್ಯರ್ಥಿಯ ಗೆಲುವಿಗೆ 45 ಶಾಸಕರ ಮತಗಳ ಅಗತ್ಯವಿದೆ. ಕಾಂಗ್ರೆಸ್ ತನ್ನ ಶಾಸಕರನ್ನು ತಲಾ ಒಬ್ಬ ಅಭ್ಯರ್ಥಿಗೆ 45 ರಂತೆ ಹಂಚಿಕೆ ಮಾಡಿ ಹೆಚ್ಚುವರಿಯಾಗಿರುವ ಪಕ್ಷೇತರ ಮತಗಳನ್ನು ಸೇರಿಸಿ 46 ಮತಗಳ ಗಡಿ ದಾಟಿಸುವ ಪ್ರಯತ್ನ ನಡೆಸುತ್ತಿದ್ದಾರೆ.
|
10 |
+
ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಮೋದಿ
|
11 |
+
ಪ್ರತಿಪಕ್ಷವಾದ ಬಿಜೆಪಿ ಕೂಡ ತನ್ನ ಅಭ್ಯರ್ಥಿ ನಾರಾಯಣ ಸ ಬಾಂಡಗೆ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ಚಲಾಯಿಸುವಂತೆ ಹಾಗೂ ಜೆಡಿಎಸ್ ಕೂಡ ತನ್ನ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ಚಲಾಯಿಸುವಂತೆ ಶಾಸಕರಿಗೆ ವಿಪ್ ನೀಡಲಿದೆ. ಬಿಜೆಪಿಯ ಹೆಚ್ಚುವರಿ ಮತಗಳನ್ನು ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತವನ್ನು ಜೆಡಿಎಸ್ ಅಭ್ಯರ್ಥಿಗೆ ಹಾಕಲು ತೀರ್ಮಾನಿಸುವ ಸಂಭವವಿದೆ. ಹಾಗೆಯೇ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುವ ಜೆಡಿಎಸ್ ಮತ್ತು ಬಿಜೆಪಿಯ ಶಾಸಕರು ದ್ವಿತೀಯ ಪ್ರಾಶಸ್ತ್ಯದ ಮತವನ್ನು ಬಿಜೆಪಿಯ ಅಭ್ಯರ್ಥಿಗೆ ಹಾಕುವಂತೆ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.
|
12 |
+
ಎನ್ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ ನಂತರ ಉಭಯ ಪಕ್ಷಗಳು ಜಂಟಿಯಾಗಿ ಚುನಾವಣೆಯನ್ನು ಎದುರಿಸುತ್ತಿವೆ. ಹಾಗೆಯೇ ಹೋರಾಟವನ್ನು ಒಟ್ಟಾಗಿ ಮಾಡುತ್ತಿವೆ. ಆಯಾ ಪಕ್ಷಗಳ ಮುಖ್ಯ ಸಚೇತಕರು ಶಾಸಕರಿಗೆ ವಿಪ್ ನೀಡಲಿದ್ದು, ಒಂದು ವೇಳೆ ರಾಜ್ಯಸಭೆ ಚುನಾವಣೆಯಲ್ಲಿ ಸೂಚಿಸಿದ ಅಭ್ಯರ್ಥಿಗೆ ಮತ ಹಾಕದೇ ಉಲ್ಲಂಘನೆ ಮಾಡಿದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗುತ್ತದೆ.
|