CoolCoder44 commited on
Commit
ce1717b
·
verified ·
1 Parent(s): c188c15

88cb8a7dd934bd3097188aa1916b0fa168c9c0eded78c78f7a70c2460fc716e4

Browse files
Files changed (50) hide show
  1. eesanje/url_46_104_11.txt +5 -0
  2. eesanje/url_46_104_12.txt +9 -0
  3. eesanje/url_46_104_2.txt +10 -0
  4. eesanje/url_46_104_3.txt +5 -0
  5. eesanje/url_46_104_4.txt +5 -0
  6. eesanje/url_46_104_5.txt +11 -0
  7. eesanje/url_46_104_6.txt +4 -0
  8. eesanje/url_46_104_7.txt +7 -0
  9. eesanje/url_46_104_8.txt +9 -0
  10. eesanje/url_46_104_9.txt +6 -0
  11. eesanje/url_46_105_1.txt +8 -0
  12. eesanje/url_46_105_10.txt +7 -0
  13. eesanje/url_46_105_11.txt +5 -0
  14. eesanje/url_46_105_12.txt +7 -0
  15. eesanje/url_46_105_2.txt +6 -0
  16. eesanje/url_46_105_3.txt +5 -0
  17. eesanje/url_46_105_4.txt +5 -0
  18. eesanje/url_46_105_5.txt +5 -0
  19. eesanje/url_46_105_6.txt +6 -0
  20. eesanje/url_46_105_7.txt +5 -0
  21. eesanje/url_46_105_8.txt +7 -0
  22. eesanje/url_46_105_9.txt +8 -0
  23. eesanje/url_46_106_1.txt +10 -0
  24. eesanje/url_46_106_10.txt +13 -0
  25. eesanje/url_46_106_11.txt +11 -0
  26. eesanje/url_46_106_12.txt +4 -0
  27. eesanje/url_46_106_2.txt +6 -0
  28. eesanje/url_46_106_3.txt +14 -0
  29. eesanje/url_46_106_4.txt +8 -0
  30. eesanje/url_46_106_5.txt +7 -0
  31. eesanje/url_46_106_6.txt +7 -0
  32. eesanje/url_46_106_7.txt +19 -0
  33. eesanje/url_46_106_8.txt +5 -0
  34. eesanje/url_46_106_9.txt +5 -0
  35. eesanje/url_46_107_1.txt +5 -0
  36. eesanje/url_46_107_10.txt +14 -0
  37. eesanje/url_46_107_11.txt +6 -0
  38. eesanje/url_46_107_12.txt +11 -0
  39. eesanje/url_46_107_2.txt +9 -0
  40. eesanje/url_46_107_3.txt +10 -0
  41. eesanje/url_46_107_4.txt +7 -0
  42. eesanje/url_46_107_5.txt +7 -0
  43. eesanje/url_46_107_6.txt +6 -0
  44. eesanje/url_46_107_7.txt +11 -0
  45. eesanje/url_46_107_8.txt +5 -0
  46. eesanje/url_46_107_9.txt +7 -0
  47. eesanje/url_46_108_1.txt +6 -0
  48. eesanje/url_46_108_10.txt +4 -0
  49. eesanje/url_46_108_11.txt +9 -0
  50. eesanje/url_46_108_12.txt +8 -0
eesanje/url_46_104_11.txt ADDED
@@ -0,0 +1,5 @@
 
 
 
 
 
 
1
+ ಬಿಜೆಪಿಯವರು ಪ್ರತಿಭಟನೆ ಮಾಡಲಿ, ನಾವು ಪೆಟ್ರೋಲ್‌, ಡೀಸೆಲ್‌ ದರ ಕಡಿಮೆ ಮಾಡಲ್ಲ : ಗೃಹಸಚಿವ ಪರಮೇಶ್ವರ್‌
2
+ ಬೆಂಗಳೂರು,ಜೂ.19-ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರವನ್ನು ಕಡಿಮೆ ಮಾಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ದರ ಹೆಚ್ಚಳ ಮಾಡಿದ್ದು, ವಾಹನ ಸವಾರರು ಪೆಟ್ರೋಲ್‌ , ಡೀಸೆಲ್‌ನ್ನು ಖರೀದಿ ಮಾಡುತ್ತಿದ್ದಾರೆ.
3
+ ನಮ್ಮ ರಾಜ್ಯದಲ್ಲಿ ಕಡಿಮೆ ಇರುವುದರಿಂದ ನೆರೆ ರಾಜ್ಯದವರು ಬಂದು ಪೆಟ್ರೋಲ್‌, ಡೀಸೆಲ್‌ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿಯವರು ಪೊಲೀಸರ ಅನುಮತಿ ಪಡೆದು ರಸ್ತೆತಡೆ ನಡೆಸಬಹುದಾಗಿದೆ.
4
+ ಸುಪ್ರೀಂಕೋರ್ಟ್‌ ತೀರ್ಪಿನ ಪ್ರಕಾರ ರಸ್ತೆತಡೆ ಮಾಡುವಂತಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವಂತಿಲ್ಲ, ಅನುಮತಿ ಪಡೆಯದೆ ಇಲ್ಲವೇ ಅನುಮತಿಯ ಅವಧಿ ಮೀರಿ ರಸ್ತೆ ತಡೆ ನಡೆಸಿದರೆ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ. ರಸ್ತೆ ತಡೆ ಮಾಡುವವರನ್ನು ಯಾವ ರೀತಿ ತೆರವುಗೊಳಿಸಬೇಕೋ ಆ ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯಬಿದ್ದರೆ ಲಾಠಿಚಾರ್ಜ್‌ ಮಾಡಲಾಗುವುದು ಎಂದರು.
5
+ ಪ್ರತಿಭಟನೆ ಮಾಡಲು ಹಕ್ಕಿದೆ. ಈಗಾಗಲೇ ಹಲವು ಸಂಘಸಂಸ್ಥೆ, ಸಾರ್ವಜನಿಕರು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ಅಡ್ಡಿ ಪಡಿಸಿಲ್ಲ ಎಂದರು.ನೀರಿನ ದರ ಹಾಗೂ ಬಸ್‌‍ ಟಿಕೆಟ್‌ ದರ ಹೆಚ್ಚಳ ಪ್ರಸ್ತಾಪ ಆಯಾಯ ಇಲಾಖೆಗೆ ಸಂಬಂಧಿಸಿದ್ದು, ನಮಗೇನಾದರೂ ಅವುಗಳ ಬಗ್ಗೆ ದೂರು ಬಂದಾಗ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
eesanje/url_46_104_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಚದುರಂಗದಾಟ ಶುರು
2
+ ಬೆಂಗಳೂರು,ಜೂ.19-ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ತಮ್ಮ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ.
3
+ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ಷೇತ್ರದ ವಿವಿಧ ದೇವಾಲಯಗಳಿಗೆ ಭೇಟಿ ನೀಡುವ ನೆಪದಲ್ಲಿ ಜನರ ನಾಡಿಮಿಡಿತ ಅರಿಯುತ್ತಿದ್ದಾರೆ. ಉಪಚುನಾವಣೆಯಲ್ಲಿ ಯಾರನ್ನು ಸ್ಪರ್ಧೆಗಿಳಿಸಿದರೆ ಗೆಲುವು ಸಾಧ್ಯ ಎಂಬ ಬಗ್ಗೆ ಜನರ ಅಭಿಪ್ರಾಯವನ್ನು ಕಲೆ ಹಾಕುತ್ತಿದ್ದಾರೆ.
4
+ ಜೆಡಿಎಸ್‌‍ ಕೂಡ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುತ್ತಿದೆ. ಹೀಗಾಗಿ ಬಿಜೆಪಿ, ಜೆಡಿಎಸ್‌‍ನಲ್ಲಿ ಈ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಪೈಪೋಟಿ ಏರ್ಪಟ್ಟಿದೆ. ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ಸುಳಿವನ್ನು ಇನ್ನೂ 2 ಮೈತ್ರಿ ಪಕ್ಷಗಳು ಬಿಟ್ಟುಕೊಟ್ಟಿಲ್ಲ.
5
+ ಆದರೆ ಜೆಡಿಎಸ್‌‍ ಯುವಘಟಕದ ಅಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಅಲ್ಲದೆ, ಚನ್ನಪಟ್ಟಣ ತಾಲ್ಲೂಕು ಜೆಡಿಎಸ್‌‍ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌.ಸಿ.ಜಯಮುತ್ತು ಅವರಿಗೆ ಟಿಕೆಟ್‌ ನೀಡಬೇಕೆಂಬ ಒತ್ತಡವನ್ನು ಅವರ ಅಭಿಮಾನಿಗಳು ಕುಮಾರಸ್ವಾಮಿಯವರಿಗೆ ತರುತ್ತಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಜಯಮುತ್ತು ಅವರ ಅಭಿಮಾನಿಗಳು ಪೋಸ್ಟ್‌ ಹಾಕಿ ಉಪಚುನಾವಣೆಗೆ ತಮ ನಾಯಕನಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸುತ್ತಿದ್ದಾರೆ.
6
+ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಪ್ರಸ್ತುತ ವಿಧಾನಪರಿಷತ್‌ ಸದಸ್ಯರಾಗಿದ್ದು, ಉಪಚುನಾವಣೆಯಲ್ಲಿ ಸ್ಪರ್ಧೆಗಿಳಿಯುವ ಆಸಕ್ತಿ ಹೊಂದಿದ್ದಾರೆ. ಈಗಾಗಲೇ ಜೆಡಿಎಸ್‌‍ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆಯನ್ನು ನಡೆಸಿದ್ದಾರೆ.
7
+ ಚುನಾವಣೆ ಘೋಷಣೆಯಾದ ನಂತರ ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದ್ದು, ಸದ್ಯಕ್ಕೆ ಉಪಚುನಾವಣೆಯ ಮೈತ್ರಿ ಅಭ್ಯರ್ಥಿ ಯಾರೆಂಬ ಗುಟ್ಟು ಬಿಟ್ಟುಕೊಟ್ಟಿಲ್ಲ. ಈ ನಡುವೆ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌‍ ಪ್ರತಿನಿಧಿಸಬೇಕು ಎಂಬ ವಾದವು ಬಲವಾಗಿದ್ದು, ಯೋಗೀಶ್ವರ್‌ ಸ್ಪರ್ಧೆ ಮಾಡುವುದಾದರೆ ಬಿಜೆಪಿ ಬದಲಾಗಿ ಜೆಡಿಎಸ್‌‍ ಚಿಹ್ನೆಯಡಿ ಸ್ಪರ್ಧಿಸಲಿ ಎಂಬ ಸಲಹೆಯನ್ನು ನೀಡಲಾಗಿದೆ.
8
+ ಇದರ ಬಗ್ಗೆ ಯೋಗೇಶ್ವರ್‌ ಜೊತೆ ಸಮಾಲೋಚನೆ ನಡೆಸಿ ಅಂತಿಮ ರೂಪ ನೀಡಲು ಮಾಜಿ ಶಾಸಕ ಎ.ಮಂಜು ಅವರಿಗೆ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಹೇಳಲಾಗುತ್ತಿದೆ.ಎನ್‌ಡಿಎ ಮೈತ್ರಿಕೂಟದಲ್ಲಿ ಉಪ��ುನಾವಣೆ ಅಭ್ಯರ್ಥಿ ಆಯ್ಕೆ ಕುರಿತ ಯಾವುದೇ ಸಭೆಗಳೂ ಅಧಿಕೃತವಾಗಿ ನಡೆದಿಲ್ಲ. ಆದರೆ ಮಾಜಿ ಸಂಸದ ಡಿ.ಕೆ.ಸುರೇಶ್‌ ತಾವು ಉಪಚುನಾವಣೆಯಲ್ಲಿ ಸ್ಪಧಿಸುವುದಿಲ್ಲ ಎಂಬ ಸ್ಪಷ್ಟನೆ ನೀಡಿದ್ದಾರೆ. ಆದರೂ ಡಿ.ಕೆ.ಶಿವಕುಮಾರ್‌ರವರು ಕ್ಷೇತ್ರದ್ಯಂತ ಪ್ರವಾಸ ಕೈಗೊಂಡು, ಜನರ ನಾಡಿಮಿಡಿತ ಅರಿಯುವ ಕಾರ್ಯ ಮಾಡುತ್ತಿರುವುದು ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ.
9
+ ಕಾಂಗ್ರೆಸ್‌‍ಗೆ ಅನುಕೂಲಕರವಾದ ವಾತಾವರಣ ಕಂಡುಬಂದು ವಿಶ್ವಾಸ ದೊರೆಯುವುದು ಖಾತ್ರಿಯಾದರೆ ಸುರೇಶ್‌ ಅವರನ್ನೇ ಉಪಚುನಾವಣೆ ಅಭ್ಯರ್ಥಿ ಮಾಡಲಾಗುತ್ತದೆ ಎಂಬ ವಿಚಾರವು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
eesanje/url_46_104_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಉಪ ಚುನಾವಣೆಯಲ್ಲೂ ಬಿಜೆಪಿ – ಜೆಡಿಎಸ್‌‍ ಮೈತ್ರಿ ಮುಂದುವರಿಕೆ
2
+ ಬೆಂಗಳೂರು, ಜೂ.20– ಲೋಕಸಭಾ ಚುನಾವಣೆಯಂತೆ ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಮೈತ್ರಿ ಮುಂದುವರೆಸಲಿವೆ. ಲೋಕಸಭಾ ಚುನಾವಣೆಯಲ್ಲಿ ಚುನಾಯಿತರಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ.ಕುಮಾರಸ್ವಾಮಿ(ಚನ್ನಪಟ್ಟಣ), ಬಸವರಾಜ ಬೊಮಾಯಿ(ಶಿಗ್ಗಾವಿ) ಹಾಗೂ ತುಕಾರಾಂ(ಸಂಡೂರು) ತಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
3
+ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್‌‍ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌‍ ವಿರುದ್ಧ ಜಂಟಿ ಹೋರಾಟ ನಡೆಸಲಿವೆ.
4
+ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌‍ಗೆ ಬಿಟ್ಟುಕೊಡಲಿದ್ದು, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಮೂರು ಕ್ಷೇತ್ರಗಳಲ್ಲಿ ಆಂತರಿಕ ಸಮೀಕ್ಷೆ ನಡೆಸಿ ವರದಿ ಪಡೆಯಲು ಬಿಜೆಪಿ ಹೈಕಮಾಂಡ್‌ ತೀರ್ಮಾನಿಸಿದೆ.
5
+ ಸಮೀಕ್ಷಾ ವರದಿ ಆಧರಿಸಿ ಅಭ್ಯರ್ಥಿಗಳ ಆಯ್ಕೆ ಮಾಡಬೇಕು. ಲೋಕಸಭಾ ಚುನಾವಣೆಯಂತೆ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ಅದಕ್ಕೆ ಪೂರಕ ವಾತಾವರಣ ಸೃಷ್ಟಿ ಮಾಡಲು ಉಭಯ ನಾಯಕರು ನಿರ್ಧರಿಸಿದ್ದಾರೆ.
6
+ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನಿನ್ನೆ ಭೇಟಿ ಮಾಡಿ ಉಪ ಚುನಾವಣೆ ಸಂಬಂಧ ಮಾತುಕತೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಚನ್ನಪಟ್ಟಣ ನಮ ಪಕ್ಷಕ್ಕೆೆ ಬಿಟ್ಟುಕೊಡುವುದಾಗಿ ಹಾಗೂ ಉಳಿದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುವುದಾಗಿ ಶಾ ಹೇಳಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.
7
+ ಆದರೆ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಸ್ಪರ್ಧಿಸುವ ಅಪೇಕ್ಷೆ ಹೊಂದಿದ್ದಾರೆ. ಅವರು ಬಿಜೆಪಿ ಬಿಟ್ಟು ಜೆಡಿಎಸ್‌‍ ಚಿಹ್ನೆಯ ಮೇಲೆ ಸ್ಪರ್ಧೆ ಮಾಡಿದರೆ ಯಾವುದೇ ಬಿಕ್ಕಟ್ಟು ಮೈತ್ರಿಯಲ್ಲಿ ಉಂಟಾಗುವುದಿಲ್ಲ.
8
+ ಯೋಗೇಶ್ವರ್‌ ಬಿಜೆಪಿಯಿಂದ ಸ್ಪರ್ಧಿಸಲು ಜೆಡಿಎಸ್‌‍ ಒಪ್ಪದಿದ್ದರೆ ಮೈತ್ರಿಯಲ್ಲಿ ಬಿಕ್ಕಟ್ಟು ಉಂಟಾಗಲಿದೆ. ಜೆಡಿಎಸ್‌‍ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌‍ ಮೂಲಗಳು ಹೇಳಿವೆ.
9
+ ಮೈತ್ರಿ ಅಭ್ಯರ್ಥಿಯಾಗಿ ಸ್ಥಳೀಯರನ್ನೇ ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ನಡುವೆ ನಿನ್ನೆ ಕ್ಷೇತ್ರ ಪ್ರವಾಸ ಕೈಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಜನರು ಅಪೇಕ್ಷೆ ಪಟ್ಟರೆ ಉಪ ��ುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
10
+ ಹೀಗಾಗಿ ಪ್ರಬಲ ಹಾಗೂ ಸಮರ್ಥ ಅಭ್ಯರ್ಥಿಯನ್ನೇ ಎನ್‌ಡಿಎ ಮೈತ್ರಿಕೂಟ ಕಣಕ್ಕಿಳಿಸಬೇಕಿದೆ. ಮೂರು ಕ್ಷೇತ್ರಗಳಲ್ಲಿ ಮೂರು ರಾಜಕೀಯ ಪಕ್ಷಗಳ ತಲಾ ಒಬ್ಬರು ರಾಜೀನಾಮೆ ನೀಡಿದ್ದಾರೆ. ಮತ್ತೆ ಆಯಾ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಸಮರ್ಥ ಅಭ್ಯರ್ಥಿಯ ಹುಡುಕಾಟವನ್ನು ಆರಂಭಿಸಿವೆ. ಇದರಿಂದ ಉಪ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌‍ ಮತ್ತು ಮಿತ್ರ ಪಕ್ಷಗಳ ನಡುವೆ ಪ್ರತಿಷ್ಠೆಯ ಹೋರಾಟ ನಡೆಯಲಿದೆ.
eesanje/url_46_104_3.txt ADDED
@@ -0,0 +1,5 @@
 
 
 
 
 
 
1
+ ಎಂಎಸ್‌‍ಐಎಲ್‌ ಮದ್ಯ ಮಾರಾಟ ಮಳಿಗೆ ದೋಚಿದ ಕಳ್ಳರು
2
+ ಚೇಳೂರು,ಜೂ.20– ತಡರಾತ್ರಿ ಕೈಚಳಕ ತೋರಿಸಿರುವ ಕಳ್ಳರು ಮೂರು ಎಂಎಸ್‌‍ಐಎಲ್‌ ಮದ್ಯ ಮಾರಾಟ ಮಳಿಗೆ ಹಾಗೂ ಮನೆಯೊಂದರಲ್ಲಿ ಕಳವು ಮಾಡಿರುವ ಘಟನೆ ಚೇಳೂರು ಪೊಲೀಸ್‌‍ ಠಾಣೆಯಲ್ಲಿ ನಡೆದಿದೆ.
3
+ ಬಿದಿರೆ, ಎಂ.ಎನ್‌.ಕೋಟೆ, ದೊಡ್ಡಗುಣಿ ಹಾಗೂ ಕಾರೇಹಳ್ಳಿ ಗ್ರಾಮದ ಎಂಎಸ್‌‍ಐಎಲ್‌ ಮದ್ಯ ಮಾರಾಟ ಮಳಿಗೆಯ ರೋಲಿಂಗ್‌ ಶೆಟರ್‌ ಮೀಟಿ ಒಳನುಗ್ಗಿರುವ ಚೋರರು ಮನಸಿಗೆ ಬಂದಷ್ಟು ಮದ್ಯ ಹಾಗೂ ಕ್ಯಾಶ್‌ ಡ್ರಾದಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ.
4
+ ಅದೇ ರೀತಿ ಕೊಂಡ್ಲಿ ಗ್ರಾಮದಲ್ಲಿ ಮನೆಯೊಂದರ ಬೀಗ ಮುರಿದು ಅಲ್ಲೂ ಕೂಡ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ. ತಡರಾತ್ರಿ ಈ ಸರಣಿಗಳ್ಳತನ ನಡೆದಿದ್ದು, ಎಷ್ಟು ಹಣ, ಆಭರಣ ಹಾಗೂ ಮದ್ಯ ಕಳ್ಳತನವಾಗಿದೆ ಎಂಬುದು ತಿಳಿದುಬಂದಿಲ್ಲ.
5
+ ಇಂದು ಬೆಳಿಗ್ಗೆ ಅಂಗಡಿಗಳ ಬಾಗಿಲು ತೆರೆದಿರುವುದನ್ನು ಕಂಡ ಸ್ಥಳೀಯರು ಮಾಲೀಕರಿಗೆ ಸುದ್ದಿ ತಿಳಿಸಿದ್ದಾರೆ.ಕೂಡಲೇ ಚೇಳೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸುತ್ತಮುತ್ತಲಿನ ಸಿಸಿ ಟಿವಿಗಳನ್ನು ಪರಿಶೀಲಿಸಿದ್ದು, ಒಂದೇ ಗ್ಯಾಂಗ್‌ ಸರಣಿ ಕಳ್ಳತನ ಮಾಡಿದೆಯೋ ಅಥವಾ ಬೇರೆ ಬೇರೆ ಕಳ್ಳರ ತಂಡ ಈ ಕೃತ್ಯ ಎಸಗಿದ್ದಾರಾ? ಎಂಬುದು ತನಿಖೆಯ ನಂತರ ತಿಳಿದುಬರಬೇಕಿದೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_104_4.txt ADDED
@@ -0,0 +1,5 @@
 
 
 
 
 
 
1
+ ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರ ಸಾವು
2
+ ಚಿಕ್ಕಮಗಳೂರು,ಜೂ.20-ನರಸಿಂಹರಾಜಪುರ ತಾಲೂಕಿನ ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗದ ಮೂವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ.ಶಿವಮೊಗ್ಗದ ವಿದ್ಯಾನಗರ ಬಡಾವಣೆಯ ಅ್ದಾಖಾನ್‌ (23), ಆದಿಲ್‌ (19) ಹಾಗೂ ಸಾಜೀದ್‌(24) ಮೃತ ದುರ್ದೈವಿಗಳು ಎನ್ನಲಾಗಿದೆ.
3
+ ಮಾರಿದಿಬ್ಬ ಬಳಿಯಿಂದ ಹಿನ್ನೀರಿನ ವಿಹಂಗಮ ನೋಟ ಸವಿಯಲು ನಾಲ್ವರು ಯುವಕರು ಒಟ್ಟಿಗೆ ಬಂದಿದ್ದರು. ಇವರ ಪೈಕಿ ಒಬ್ಬರು ದಡದಲ್ಲಿ ಕುಳಿತಿದ್ದರು. ಉಳಿದ ಮೂವರು ಬದಿಯಲ್ಲಿದ್ದ ತೆಪ್ಪ ತೆಗೆದುಕೊಂಡು ಹಿನ್ನೀರಿನೊಳಗೆ ಸ್ವಲ್ಪ ದೂರ ತೆರಳಿದ್ದಾರೆ. ಚಾಲನೆ ಗೊತ್ತಿಲ್ಲದಿದ್ದರಿಂದ ನಿಯಂತ್ರಣ ತಪ್ಪಿ ತೆಪ್ಪ ಪಲ್ಟಿಯಾಗಿ ಮೂವರು ನೀರಿನಲ್ಲಿ ಮುಳುಗಿದ್ದಾರೆ.
4
+ ಪ್ರಾಥಮಿಕ ಮಾಹಿತಿ ಪ್ರಕಾರ, ತೆಪ್ಪದ ಮಾಲೀಕ ಕೂಡ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಮೃತದೇಹಗಳ ಪತ್ತೆಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ.
5
+ ಶವ ದೊರೆತ ಬಳಿಕ ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದರು.ರಾತ್ರಿ 8ರ ತನಕ ಶೋಧ ಕಾರ್ಯ ನಡೆಸಲಾಯಿತು. ಆದರೂ ಮೃತದೇಹಗಳು ಸಿಗದೆ, ಇಂದೂ ಕೂಡ ಕಾರ್ಯಾಚರಣೆ ಮುಂದುವರೆದಿದೆ.
eesanje/url_46_104_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರಾಜ್ಯದಲ್ಲಿ ಕಡ್ಡಾಯವಾಗಿ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಜೂ.19-ರಾಜ್ಯದಲ್ಲಿ ಕಡ್ಡಾಯವಾಗಿ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ ನಮ್ಮ ಸರ್ಕಾರದ ಸಂಕಲ್ಪ. ಇದನ್ನು ಚಾಚೂ ತಪ್ಪದೇ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
3
+ ನಗರದ ಅಂಬೇಡ್ಕರ್‌ ಭವನದಲ್ಲಿ ಸಮಾಜಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾಡನಾಡಿದ ಅವರು, 1994-95 ರಲ್ಲಿ ತಾವು ಹಣಕಾಸು ಸಚಿವರಾಗಿದ್ದಾಗ ವಸತಿ ಶಾಲೆಗಳನ್ನು ಆರಂಭಿಸಲಾಯಿತು ಎಂದರು. ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆಯಿಂದ 833, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 113 ಸೇರಿ 946 ವಸತಿ ಶಾಲೆಗಳಿವೆ. ಶೇ.86 ರಷ್ಟು ಹೋಬಳಿಗಳಲ್ಲಿ ವಸತಿ ಶಾಲೆಗಳಿದ್ದು, ಕೆಲವು ಕಡೆ ಒಂದು ಹೋಬಳಿಗೆ ಎರಡು ಶಾಲೆಗಳಿವೆ. ಬಾಕಿ ಇರುವ ಶೇ.14 ರಷ್ಟು ಹೋಬಳಿಗಳಲ್ಲಿ ವಸತಿ ಶಾಲೆಯನ್ನು ಆರಂಭಿಸಬೇಕು.
4
+ ಈ ವರ್ಷ 20 ಶಾಲೆಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಶಾಲೆಗಳನ್ನು ಆರಂಭಿಸಲಾಗುವುದು ಎಂದರು.ಸಮಾಜದಲ್ಲಿ ಶ್ರೇಣೀಕೃತ ವ್ಯವಸ್ಥೆಯಿಂದಾಗಿ ಜಾತಿ ಹಾಗೂ ಅಸಮಾನತೆ ಇದೆ. ಬುದ್ದ, ಬಸವಣ್ಣ ಅವರು ಹೇಳಿದ ಬಳಿಕವೂ ಜಾತಿ ನಿರ್ಮೂಲನೆಯಾಗಿಲ್ಲ. ವೈಚಾರಿಕತೆ ಬೆಳೆದಿಲ್ಲ. ಕರ್ಮ ಸಿದ್ಧಾಂತವನ್ನು ನಂಬುವುದನ್ನು ಬಿಟ್ಟಿಲ್ಲ.
5
+ ಶಿಕ್ಷಣ ಎಂದರೆ ಅಂಕ ಗಳಿಸುವುದು, ನೌಕರಿ ಗಿಟ್ಟಿಸುವುದು ಮಾತ್ರವಲ್ಲ. ವೈಜ್ಞಾನಿಕ ಹಾಗೂ ವೈಚಾರಿಕ ಮನೋಭಾವ ಬೆಳೆಯಬೇಕಿದೆ ಎಂದು ಹೇಳಿದರು. ವಸತಿ ಶಾಲೆಯ ಶಿಕ್ಷಕರು ಮೊದಲು ಜಾತಿ ವ್ಯವಸ್ಥೆಯನ್ನು ಬೆಂಬಲಿಸುವುದನ್ನು ಬಿಡಬೇಕು. ನಂತರ ಮಕ್ಕಳಿಗೆ ವೈಚಾರಿಕ ಶಿಕ್ಷಣವನ್ನು ಕಲಿಸಬೇಕು ಎಂದು ಸೂಚನೆ ನೀಡಿದರು.
6
+ ತಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ಮುಖ್ಯಮಂತ್ರಿಯವರು ನನಗೆ ಶಿಕ್ಷಣ ದೊರೆಯದೇ ಇದ್ದರೆ ಕಾನೂನು ಪದವೀಧರನಾಗುತ್ತಿರಲಿಲ್ಲ, ರಾಜ್ಯದ ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹುಟ್ಟಿನಿಂದ ಯಾರೂ ದಡ್ಡರಲ್ಲ. ಅವಕಾಶಗಳ ಕೊರತೆಯಿಂದಾಗಿ ಪ್ರತಿಭೆ ಬೆಳಕಿಗೆ ಬರುವುದಿಲ್ಲ.
7
+ ಹಳ್ಳಿಗಾಡಿನಲ್ಲಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಮಕ್ಕಳಿಗೆ ಅವಕಾಶಗಳ ಕೊರತೆ ಇರುತ್ತದೆ ಎಂದು ಹೇಳಿದರು. ವಸತಿ ಶಾಲೆಯ ಮಕ್ಕಳು ಉತ್ತಮ ಫಲಿತಾಂಶ ಗಳಿಸಿದ್ದಾರೆ. ಅದರಲ್ಲೂ ಅಂಕಿತ 100 ಕ್ಕೆ 100 ಅಂಕ ಪಡೆದಿದ್ದು ನನಗೆ ಅತೀವ ಸಂತಸ ಉಂಟುಮಾಡಿತು. ಇಂದು ಆ ಮಕ್ಕಳನ್ನು ಸನಾನಿಸಲಾಗಿದೆ ಎಂದರು.
8
+ ಸಚಿವ ಎಚ್‌.ಸಿ.ಮಹದೇವಪ್ಪ ಮಾತನಾಡಿ, ರಾಜ್ಯದಲ್ಲಿ 175 ಹಿಂದುಳಿದ ವರ್ಗಗಳ, 154 ಪರಿಶಿಷ್ಟ ವರ್ಗದ ಹಾಗೂ 500 ಕ್ಕೂ ಹೆಚ್ಚು ಪರಿಶಿಷ್ಟ ಜಾತಿಯ ವಸತಿ ಶಾಲೆಗಳಿವೆ. ಇಲ್ಲಿ ಪ್ರವೇಶ ನೀಡುವಾಗ ಪರಿಶಿಷ್ಟ ಜಾತಿ ಪಂಗಡದ ಮಕ್ಕಳಿಗೆ ಶೇ.75 ರಷ್ಟು ಹಾಗೂ ಸಾಮಾನ್ಯ ವರ್ಗಕ್ಕೆ ಶೇ.25 ರಷ್ಟು ಮೀಸಲಾತಿ ನೀಡಲಾಗುತ್ತಿ��ೆ ಎಂದು ವಿವರಿಸಿದರು.
9
+ ದೇಶದಲ್ಲಿ ವಾಕ್‌ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯಕ್ಕೆ ತಡೆಯಾಗುವ ವಾತಾವರಣ ನಿರ್ಮಾಣವಾಗಿತ್ತು. ಭಾಷೆ, ಉಡುಪು ಮತ್ತು ಆಹಾರ ಪದ್ಧತಿಯಲ್ಲಿ ಏಕರೂಪತೆಗಾಗಿ ಬಲವಂತಗೊಳಿಸುವ ಪರಿಸ್ಥಿತಿ ಎದುರಾದಾಗ ನಮ ಸರ್ಕಾರ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸಿತ್ತು ಎಂದು ವಿವರಿಸಿದರು.
10
+ ಸಭಾಪತಿ ಬಸವರಾಜಹೊರಟ್ಟಿ, ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುವ ಮಕ್ಕಳು ಉನ್ನತಾಧಿಕಾರಿಗಳಾಗಬೇಕು, ಸಮಾಜಸೇವೆ ಮಾಡಬೇಕು ಎಂದು ಕರೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಸವಣ್ಣನವರ ತತ್ವ ಅನುಸರಿಸುತ್ತಿದ್ದಾರೆ. ಹಿಡಿದ ಕೆಲಸವನ್ನು ಮಾಡುವ ಪಟ್ಟು ಹಿಡಿದರೆ ಹರಿ, ಬ್ರಹ ಬಂದರೂ ಅದನ್ನು ನಿಲ್ಲಿಸುವುದಿಲ್ಲ ಎಂದು ಹಾಡಿ ಹೊಗಳಿದರು.
11
+ ರಿಜ್ವಾನ್‌ ಹರ್ಷದ್‌, ವಿಧಾನಪರಿಷತ್ ಸದಸ್ಯ ಸುಧಾಂದಾಸ್‌‍ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಎಸ್‌‍ಎಸ್‌‍ಎಲ್‌ಸಿ, ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಹಾಗೂ ಶೇ. 100ರಷ್ಟು ಫಲಿತಾಂಶದ ಪಡೆದ ಶಾಲೆಗಳ ಪ್ರಾಂಶುಪಾಲರನ್ನು ಕಾರ್ಯಕ್ರಮದಲ್ಲಿ ಸನಾನಿಸಲಾಯಿತು.625 ಕ್ಕೆ 625 ಅಂಕ ಪಡೆದ ಬಾಗಲಕೋಟೆಯ ಅಂಕಿತ ಬಸಪ್ಪ ಅವರಿಗೆ 5 ಲಕ್ಷ ರೂ.ವಿನ ನಗದು ಬಹುಮಾನದೊಂದಿಗೆ ಸನಾನಿಸಲಾಯಿತು.
eesanje/url_46_104_6.txt ADDED
@@ -0,0 +1,4 @@
 
 
 
 
 
1
+ ಕೇಂದ್ರ ರೈಲ್ವೆ ಸಚಿವರೊಂದಿಗೆ ಎಚ್‌ಡಿಕೆ ಮಹತ್ವದ ಚರ್ಚೆ
2
+ ನವದೆಹಲಿ,ಜೂ.19-ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿಯಾದ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದ ರೈಲ್ವೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.
3
+ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣ ಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಕುರಿತಂತೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
4
+ ರೈಲ್ವೆ ಸಚಿವರು ರಾಜ್ಯದ ಯೋಜನೆಗಳ ಬಗ್ಗೆ ಅತ್ಯಂತ ಸಕಾರಾತಕವಾಗಿ ಸ್ಪಂದಿಸಿದ್ದು, ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಮಾಜಿ ಪ್ರಧಾನಿಗಳಾದ ಹೆಚ್‌‍.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತಂತೆ ಚರ್ಚೆ ನಡೆಸಲಾಗಿದೆ.
eesanje/url_46_104_7.txt ADDED
@@ -0,0 +1,7 @@
 
 
 
 
 
 
 
 
1
+ ರೇಣುಕಾಸ್ವಾಮಿಯ ಮರಣೋತ್ತರ ವರದಿ ತಿರುಚಲು ಹಣದ ಆಮಿಷವೊಡ್ಡಿದ್ದು ನನಗೆ ಗೊತ್ತಿಲ್ಲ : ಗುಂಡೂರಾವ್
2
+ ಮೈಸೂರು, ಜೂ.19-ರೇಣುಕಾಸ್ವಾಮಿಯ ಮರಣೋತ್ತರ ವರದಿ ತಿರುಚಲು ಹಣದ ಆಮಿಷವೊಡ್ಡಿದ್ದರು ಎನ್ನಲಾದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಅಂತಹದ್ದೇನಾದರೂ ಇದ್ದರೆ ಆ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿಯನ್ನು ಹೀನಾಯವಾಗಿ ಕೊಲೆ ಮಾಡಲಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ.
3
+ ತಪಿತಸ್ಥರಿಗೆ ಶಿಕ್ಷೆಯಾಗಬೇಕು, ಯಾವುದೇ ಆಗಲಿ ಅತಿರೇಕಕ್ಕೆ ಹೋದಾಗ ಅಸಹಿಷ್ಣತೆ ಉಂಟಾಗುತ್ತದೆ. ನಾನು ಎಂಬ ಅಹಂ ಬಿಡಬೇಕು. ನಮ್ಮಿಂದಲೇ ಎಲ್ಲಾ ಎಂಬ ಮನೋಭಾವನೆ ಬದಲಾಗಬೇಕು ಎಂದರು.ಈ ಪ್ರಕರಣದಲ್ಲಿ ನಾವ್ಯಾರು ಮಧ್ಯಪ್ರವೇಶ ಮಾಡುವುದಿಲ್ಲ. ಪೊಲೀಸರು ಕೂಲಂಕುಶವಾಗಿ ಸಾಕ್ಷಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತಿದ್ದಾರೆ ಎಂದರು.
4
+ ರೇಣುಕಾಸ್ವಾಮಿ ಅವರು ಚಿತ್ರಹಿಂಸೆ, ರಕ್ತಸ್ರಾವದಿಂದ ಆಘಾತಗೊಳಗಾಗಿ ಮೃತಪಟ್ಟಿದ್ದಾರೆಂದು ವೈದ್ಯಕೀಯ ವರದಿಯಲ್ಲಿ ತಿಳಿಸಲಾಗಿದೆ. ರೇಣುಕಾಸ್ವಾಮಿಯವರ ದೇಹದ ಮೇಲೆ 15ಕ್ಕೂ ಹೆಚ್ಚು ಗಾಯದ ಗುರುತುಗಳಿವೆ. ಅವರ ತಲೆ, ಹೊಟ್ಟೆ, ಎದೆ ಇತರ ಭಾಗಗಳಲ್ಲಿ ದೊಣ್ಣೆ, ಚರ್ಮದ ಬೆಲ್್ಟ ಹಾಗೂ ಹಗ್ಗದಿಂದ ಹೊಡೆದಿರುವ ಗುರುತುಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ.ಹಾಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತವಾಗಿ ಪೊಲೀಸರು ಹಗಲಿರುಳು ತನಿಖೆ ನಡೆಸುತ್ತಿದ್ದಾರೆಂದು ಪ್ರತಿಕ್ರಿಯಿಸಿದರು.
5
+ ಬೆಲೆ ಏರಿಕೆ ಅನಿವಾರ್ಯ:ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಕಡಿಮೆ ಇದೆ. ಕೇಂದ್ರ ಸರ್ಕಾರ ತನಗೆ ಬರುವ ತೆರಿಗೆ ಸುಂಕವನ್ನ ಇಳಿಸದೆ ಕೇವಲ ನಮ್ಮನ್ನ ಮಾತ್ರ ತೆರಿಗೆ ಇಳಿಸಿ ಎಂದರೆ ಹೇಗೆ.
6
+ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹಣ ಅನಿವಾರ್ಯವಾಗಿದೆ. ಅದಕ್ಕಾಗಿ ಸಂಪನ್ಮೂಲ ಕ್ರೂಢೀಕರಣ ಮಾಡುತ್ತಿದ್ದೇವೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.ಗ್ಯಾರಂಟಿಗಳಿಗಾಗಿ ಬೆಲೆ ಏರಿಸಿದ್ದೇವೆ ಎಂಬುವುದು ಸುಳ್ಳು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ, ಪರಿಷ್ಕರಣೆ ಮಾಡುವುದಾಗಲೀ ಇಲ್ಲ. ಅಧ್ಯಯನ ನಡೆಸಿ ಕೆಲ ಬದಲಾವಣೆ ಮಾಡಬಹುದು ಎಂದರು.
7
+ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಽಸಿದಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಇದಕ್ಕೆ ಸಾಕಷ್ಟು ಕಡಿವಾಣ ಹಾಕಲಾಗಿದೆ. ಹೆಣ್ಣು ಭ್ರೂಣ ಹತ್ಯೆ ಸಂಪೂರ್ಣ ನಿಂತಿದೆ ಎಂದು ಹೇಳುವುದಿಲ್ಲ. ನಮ್ಮ ಅಽಕಾರಿಗಳು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.ಬೆಳಗಾವಿ, ಮಂಡ್ಯ ಸೇರಿದಂತೆ ಹಲವಡೆ ದಾಳಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಭೆ ನಡೆಸುತ್ತೇನೆ. ಮೈಸೂರಿನ ಪ್ರಕರಣ ನ್ಯಾಯಾಲಯದಲ್ಲಿದೆ ಎಂದರು.
eesanje/url_46_104_8.txt ADDED
@@ -0,0 +1,9 @@
 
 
 
 
 
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 118 ಸಾಕ್ಷ್ಯಗಳ ಸಂಗ್ರಹ!
2
+ ಬೆಂಗಳೂರು, ಜೂ.19-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರು ಕುಗೊಳಿಸಿ ಇಂಚಿಂಚೂ ಬಿಡದೆ ಸಾಕ್ಷಿಗಳನ್ನು ಸಂಗ್ರಹಿಸುತ್ತಿರುವ ವಿಜಯನಗರ ಉಪವಿಭಾಗದ ಪೊಲೀಸರು ಇದು ವರೆಗೂ ಬರೋಬ್ಬರಿ 118 ವಸ್ತುಗಳನ್ನು ವಿವಿಧ ಸ್ಥಳಗಳಿಂದ ಜಪ್ತಿ ಮಾಡಿದ್ದಾರೆ.
3
+ ಜೂ. 8ರಂದು ರೇಣುಕಾಸ್ವಾಮಿಯನ್ನು ಚಿತ್ರ ದುರ್ಗದಿಂದ ಕರೆತಂದ ವಾಹನ ಸೇರಿದಂತೆ ಅವರು ಕೊಲೆಯಾದ ಪಟ್ಟಣಗೆರೆ ಶೆಡ್ನಲ್ಲಿ ದೊರೆತ ಪ್ರತಿಯೊಂದು ವಸ್ತುವನ್ನು ಸಹ ಸೀಜ್ ಮಾಡಲಾಗಿದೆ. ಬೆಂಗಳೂರು, ಮೈಸೂರು, ಚಿತ್ರದುರ್ಗದಲ್ಲಿ ಸ್ಥಳ ಮಹಜರು ಮಾಡಿ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
4
+ ಅಲ್ಲದೆ, ಕೃತ್ಯಕ್ಕೆ ಬಳಸಿದಂತಹ ವಸ್ತುಗಳು, ಆರೋಪಿಗಳ ಬಟ್ಟೆಗಳು, ಶೂ, ಚಪ್ಪಲಿ ಹಾಗೂ ಓಡಾಡಲು ಬಳಸಿದಂತಹ ವಾಹನಗಳು ಸೇರಿದಂತೆ ಹೀಗೆ ಹಲವು ಸಾಕ್ಷ್ಯಗಳನ್ನು ಕಲೆಹಾಕಿ ವಶಪಡಿಸಿಕೊಳ್ಳಲಾಗಿದೆ.
5
+ ಈಗಾಗಲೇ ನಟ ದರ್ಶನ್ ಮನೆ, ಪವಿತ್ರಗೌಡ ಮನೆ ಹಾಗೂ ದರ್ಶನ್ಗೆ ಸೇರಿದ ಫಾರ್ಮ್ಹೌಸ್ ಹಾಗೂ ಕೃತ್ಯಕ್ಕೂ ಮುನ್ನ ಪಾರ್ಟಿ ಮಾಡಿದಂತಹ ಹೊಟೇಲ್ ಮತ್ತು ದರ್ಶನ್ ಬಂಧನದ ವೇಳೆ ತಂಗಿದ್ದ ಹೊಟೇಲ್ಗಳಲ್ಲೂ ಸಹ ಸ್ಥಳ ಮಹಜರು ನಡೆಸಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.ಈ ಪ್ರಕರಣದ ಆರೋಪಿಗಳನ್ನು ಅಷ್ಟೇ ಅಲ್ಲದೆ ಅವರಿಗೆ ಸಂಬಂಧಿಸಿದವರನ್ನು ಸಹ ಪೊಲೀಸರು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
6
+ ಈ ಪ್ರಕರಣದಲ್ಲಿ ಪ್ರಮುಖ ಹಾಗೂ ಮಹತ್ತರವಾದ ಸಾಕ್ಷ್ಯವಾದ ರೇಣುಕಾಸ್ವಾಮಿ ಅವರ ಮೊಬೈಲ್ ಹಾಗೂ ಸಿಮ್ ಇದುವರೆಗೂ ಪತ್ತೆಯಾಗಿಲ್ಲ. ಈ ಮೊಬೈಲ್ ಕೊಲೆ ಪ್ರಕರಣಕ್ಕೆ ಅತ್ಯಂತ ಮಹತ್ವದ್ದಾಗಿದೆ. ಸಾಕ್ಷಿ ನಾಶ ಪಡಿಸಲೆಂದೇ ರೇಣುಕಾಸ್ವಾಮಿ ಮೃತದೇಹ ಎಸೆದ ರಾಜಕಾಲುವೆಗೆ ಆತನ ಮೊಬೈಲ್ನ್ನು ಸಹ ಆರೋಪಿ ರಘು ಎಸೆದಿರುವುದಾಗಿ ವಿಚಾರಣೆ ವೇಳೆ ಗೊತ್ತಾಗಿದ್ದು, ರಾಜಕಾಲುವೆಯಲ್ಲಿ ಹುಡುಕಾಟ ನಡೆಸಿದರಾದರೂ ಇದುವರೆಗೂ ಪತ್ತೆಯಾಗಿಲ್ಲ.
7
+ ರೇಣುಕಾಸ್ವಾಮಿ ಮೊಬೈಲ್ ಅಲ್ಲದೆ ಆರೋಪಿ ರಘು ಮೊಬೈಲ್ನ್ನು ಸಹ ಆರೋಪಿ ಪ್ರದೋಶ್ ಅದೇ ರಾಜಕಾಲುವೆಗೆ ಎಸೆದಿದ್ದು, ಈ ಎರಡೂ ಮೊಬೈಲ್ ಫೋನ್ಗಳು ಪತ್ತೆಯಾದರೆ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ.
8
+ ಅಗ್ನಿಶಾಮಕದ ನೆರವು:ಮೊಬೈಲ್ ಪತ್ತೆಗಾಗಿ ಇದೀಗ ಅಗ್ನಿಶಾಮಕ ಇಲಾಖೆಯ ನೆರವನ್ನು ಪಡೆದು ಮೊಬೈಲ್ಗಾಗಿ ಪೊಲೀಸರು ಹುಡುಕಾಟ ನಡೆಸಲಿದ್ದಾರೆ.ರೇಣುಕಾಸ್ವಾಮಿ ಮೊಬೈಲ್ನಲ್ಲಿ ಪವಿತ್ರಾಗೌಡಗೆ ಕಳುಹಿಸಿದ ಚಿತ್ರಗಳು, ಸಂದೇಶ ಹಾಗೂ ಅಪಹರಣದ ದಿನ ಆತನಿಗೆ ಬಂದ ಮೊಬೈಲ್ ಕರೆಗಳು ಸಂಗ್ರಹವಾಗಿವೆ. ಅಲ್ಲದೆ, ರೇಣುಕಾಸ್ವಾಮಿ ಮೇಲೆ ಅಂದು ನಡೆದ ಹಲ್ಲೆಯನ್ನು ರಘು ಮೊಬೈಲ್ನಲ್ಲಿ ವಿಡಿಯೋ ವಿಡಿಯೋ ಮಾಡಿಕೊಂಡಿದ್ದ.
9
+ ಹಾಗಾಗಿ ಆತನ ಮೊಬೈಲ್ನ್ನು ಪ್ರದೋಶ್ ರಾಜಕಾಲುವೆಗೆ ಎಸೆದಿದ್ದ. ಈತನ ಮೊಬೈಲ್ ದೊರೆತರೆ ಈ ಪ್ರಕರಣ ದೊಡ್ಡ ತಿರುವನ್ನೇ ಪಡೆದುಕೊಳ್ಳಲಿದ್ದು, ಆರೋಪಿಗಳಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ.ಒಟ್ಟಾರೆ ರೇಣುಕಾಸ್ವಾಮಿ ಕೊಲೆಗೆ ಸಂಗ್ರಹಿಸಿದ ಪ್ರತಿ ವಸ್ತುವನ್ನು ಸಹ ಸಾಕ್ಷ್ಯವನ್ನಾಗಿ ಪರಿಗಣಿಸಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
eesanje/url_46_104_9.txt ADDED
@@ -0,0 +1,6 @@
 
 
 
 
 
 
 
1
+ ಬೆಂಗಳೂರಿಗರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ “ಗ್ಯಾರಂಟಿ”
2
+ ಬೆಂಗಳೂರು,ಜೂ.19– ಪೆಟ್ರೋಲ್ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿ ಗಾಯದ ಮೇಲೆ ಬರೆ ಎಳೆದಿರುವ ರಾಜ್ಯಸರ್ಕಾರ ಈಗ ನೀರಿನ ದರವನ್ನು ಹೆಚ್ಚಿಸುವ ಮೂಲಕ ಬೆಂಗಳೂರಿನ ನಾಗರಿಕರಿಗೆ ಮತ್ತಷ್ಟು ಸಂಕಷ್ಟ ತಂದಿಡಲು ಮುಂದಾಗಿದೆ.
3
+ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ನೀರು ಪೂರೈಸುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸುಸ್ಥಿರತೆಗಾಗಿ ದರ ಪರಿಷ್ಕರಣೆ ಅನಿವಾರ್ಯ ಎಂದು ಸ್ಪಷ್ಟಪಡಿಸಿದ್ದಾರೆ.
4
+ ಕಳೆದ 10 ವರ್ಷಗಳಿಂದಲೂ ನೀರಿನ ದರ ಹೆಚ್ಚಳವಾಗಿಲ್ಲ. ಯಾವುದೇ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ವರ್ಷದಿಂದ ವರ್ಷಕ್ಕೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಯಾವುದೇ ಬ್ಯಾಂಕುಗಳು ಆರ್ಥಿಕ ನೆರವಿಗೆ ಮುಂದೆ ಬರುತ್ತಿಲ್ಲ ಎಂದರು.ಸಂಗ್ರಹಿಸಲಾಗುತ್ತಿರುವ ನೀರಿನ ಕರದಲ್ಲಿ ಶೇ.70 ರಷ್ಟು ವಿದ್ಯುತ್ ಬಿಲ್ ಮತ್ತು ಕಾರ್ಮಿಕರ ವೇತನಕ್ಕೆ ಸಂದಾಯವಾಗುತ್ತಿದೆ.
5
+ ರಾಜಕೀಯ ಕಾರಣಕ್ಕಾಗಿ ನೀರಿನ ದರ ಪರಿಷ್ಕರಣೆ ಮಾಡದೇ ಸಂಸ್ಥೆಯನ್ನು ನಷ್ಟಕ್ಕೊಳಪಡಿಸಲಾಗುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಸೇರಿದಂತೆ ಹಲವಾರು ಸಂಸ್ಥೆಗಳು ರಾಜಕೀಯವನ್ನು ಬದಿಗಿಟ್ಟು ನಿರ್ಧಾರ ತೆಗೆದುಕೊಳ್ಳುವಂತೆ ಸಲಹೆ ನೀಡುತ್ತಿವೆ ಎಂದು ಹೇಳಿದರು.
6
+ ನೀರಿನ ದರ ಪರಿಷ್ಕರಣೆ ಸೇರಿದಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಆರ್ಥಿಕ ಸುಸ್ಥಿರತೆಗೆ ಸಾಧುವಾಗಿರುವ ಎಲ್ಲಾ ಸಾಧ್ಯತೆಗಳನ್ನು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯಕ್ಕೆ ಕಾಲಮಿತಿ ನಿಗದಿ ಮಾಡಲಾಗಿಲ್ಲ. ಆದರೆ ನಿಷ್ಠೂರವಾದ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಹೇಳಿದ್ದಾರೆ.
eesanje/url_46_105_1.txt ADDED
@@ -0,0 +1,8 @@
 
 
 
 
 
 
 
 
 
1
+ ಜೂ.24 ರಂದು ವಿಧಾನಪರಿಷತ್‌ ನೂತನ ಸದಸ್ಯರ ಪ್ರಮಾಣವಚನ
2
+ ಬೆಂಗಳೂರು,ಜೂ.19-ವಿಧಾನಪರಿಷತ್‌ಗೆ ಚುನಾಯಿತರಾಗಿರುವ 17 ನೂತನ ಸದಸ್ಯರು ಜೂ.24 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ಹಾಗೂ 3 ಶಿಕ್ಷಕರ ಮತ್ತು 3 ಪದವೀಧರ ಕ್ಷೇತ್ರಗಳಿಂದ ಮೇಲನೆಯ 6 ಸದಸ್ಯ ಸ್ಥಾನಗಳಿಗೆ ಚುನಾಯಿತರಾಗಿದ್ದಾರೆ.
3
+ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.ವಿಧಾನಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಹೊಸದಾಗಿ ಆಯ್ಕೆಯಾಗಿರುವ 11 ಸದಸ್ಯರು ಅಧಿಕಾರ ಹಾಗೂ ಗೌಪ್ಯತೆಯ ತಮ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.
4
+ ಈ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್‌‍, ಕಾಂಗ್ರೆಸ್‌‍ನ ನಾಯಕರು ಹಾಗೂ ನೂತನ ಸದಸ್ಯರ ಕುಟುಂಬ ಸದಸ್ಯರು, ಅಭಿಮಾನಿಗಳು ಹಾಜರಿರಲಿದ್ದಾರೆ.ವಿಧಾನಸಭೆಯಿಂದ ಅವಿರೋಧವಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌‍ನ ಐವಾನ್‌ ಡಿಸೋಜ, ಕೆ.ಗೋವಿಂದರಾಜು, ಜಗದೇವ ಗುತ್ತೇದಾರ್‌, ಬಲ್ಕಿಸ್‌‍ ಬಾನು, ಡಾ.ಯತೀಂದ್ರ ಎಸ್‌‍., ಸಚಿವ ಎನ್‌.ಎಸ್‌‍.ಬೋಸರಾಜ್‌, ಎಸ್‌‍.ವಸಂತಕುಮಾರ್‌, ಬಿಜೆಪಿಯ ಸಿ.ಟಿ.ರವಿ, ಎನ್‌.ರವಿಕುಮಾರ್‌, ಮೂಳೆ ಮಾರುತಿರಾವ್‌ ಹಾಗೂ ಜೆಡಿಎಸ್‌‍ನಿಂದ ಟಿ.ಎನ್‌.ಜವರಾಯಿಗೌಡ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
5
+ ಕಾಂಗ್ರೆಸ್‌‍ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ರಾಮೋಜಿಗೌಡ (ಬೆಂಗಳೂರು ಪದವೀಧರ ಕ್ಷೇತ್ರ), ಬಿ.ಟಿ.ಶ್ರೀನಿವಾಸ್‌‍ (ಆಗ್ನೇಯ ಶಿಕ್ಷಕರ ಕ್ಷೇತ್ರ), ಡಾ.ಚಂದ್ರಶೇಖರ ಪಾಟೀಲ (ಈಶಾನ್ಯ ಪದವೀಧರ ಕ್ಷೇತ್ರ), ಜೆಡಿಎಸ್‌‍ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಎಸ್‌‍.ಎಲ್‌.ಬೋಜೇಗೌಡ (ನೈರುತ್ಯ ಶಿಕ್ಷಕರ ಕ್ಷೇತ್ರ), ವಿವೇಕಾನಂದ (ದಕ್ಷಿಣ ಶಿಕ್ಷಕರ ಕ್ಷೇತ್ರ) ಹಾಗೂ ಡಾ.ಧನಂಜಯ ಸರ್ಜಿ (ನೈರುತ್ಯ ಪದವೀಧರ ಕ್ಷೇತ್ರ) ಚುನಾಯಿತರಾಗಿದ್ದಾರೆ. ಈ 6 ಸದಸ್ಯರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
6
+ ವಿಧಾನಪರಿಷತ್‌ನ ಸದಸ್ಯರಾಗಿದ್ದ ರಘುನಾಥ್‌ರಾವ್‌ ಮಲ್ಕಾಪುರೆ, ಡಾ.ಕೆ.ಗೋವಿಂದರಾಜ್‌, ಅರವಿಂದ್‌ ಕುಮಾರ್‌ ಅರಳಿ, ಪಿ.ಎಂ.ಫಾರುಖ್‌, ಎನ್‌.ರವಿಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ ಕುಮಾರ್‌, ಎನ್‌.ಎಸ್‌‍.ಬೋಸರಾಜು ಹಾಗೂ ಮುನಿರಾಜುಗೌಡ ಜೂ.17 ರಂದು ನಿವೃತ್ತಿಯಾಗಿದ್ದಾರೆ.
7
+ ಡಾ.ತೇಜಸ್ವಿನಿಗೌಡ ಹಾಗೂ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರು ರಾಜೀನಾಮೆ ನೀಡಿದ್ದು, ನಿವೃತ್ತಿ ಹಾಗೂ ರಾಜೀನಾಮೆಯಿಂದ 17 ಸದಸ್ಯ ಸ್ಥಾನ ತೆರವಾಗಿದ್ದು, ಆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 11 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಡಾ.ಚಂದ್ರಶೇಖರ ಪಾಟೀಲ್‌, ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ಎ.ನಾರಾ���ಣಸ್ವಾಮಿ, ಎಸ್‌‍.ಎಲ್‌.ಬೋಜೇಗೌಡ ಜೂ.21 ರಂದು ನಿವೃತ್ತಿ ಹೊಂದಲಿದ್ದಾರೆ.
8
+ ಮರಿತಿಬ್ಬೇಗೌಡ ತಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಒಂದು ಸ್ಥಾನ ಖಾಲಿಯಿತ್ತು. ಈ ಆರೂ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆಇದಿದ್ದು, ನೂತನ ಸದಸ್ಯರು ಆಯ್ಕೆಯಾಗಿದ್ದಾರೆ.ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಹಾಲಿ ಸದಸ್ಯರ ಅವಧಿ ಜೂ.21 ರವರೆಗೆ ಇದೆ. ಜೂ.22, 23 ರಂದು ರಜೆ ಇರುವುದರಿಂದ ಜೂ.24 ರಂದು ಎಲ್ಲಾ 11 ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಾಗುತ್ತಿದೆ.
eesanje/url_46_105_10.txt ADDED
@@ -0,0 +1,7 @@
 
 
 
 
 
 
 
 
1
+ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ದರ್ಶನ್, ಪವಿತ್ರಗೌಡ ಬಂಧನ
2
+ ಬೆಂಗಳೂರು,ಜೂ.18-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಬಲ ಸಾಕ್ಷಿಯಾದ ಸಿಸಿ ಟಿವಿ ಪುಟೇಜ್ಗಳನ್ನು ಆಧರಿಸಿ ದರ್ಶನ್ ಹಾಗೂ ಪವಿತ್ರ ಗೌಡ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ.
3
+ ರಘು ಮತ್ತು ಆತನ ತಂಡ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿದ ಬಳಿಕ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್ಗೆ ಕರೆದೊಯ್ದ ನಂತರ ಶೆಡ್ನಲ್ಲಿ ದರ್ಶನ್ ಮತ್ತು ಆತನ ತಂಡ ಹಲ್ಲೆ ನಡೆಸಿರುವ ದೃಶ್ಯ ಶೆಡ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
4
+ ದರ್ಶನ್ ಮತ್ತು ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಪ್ರಬಲ ಸಾಕ್ಷ್ಯಾಧಾರಗಳು ಸಿಕ್ಕಿವೆ. ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗುತ್ತಿದ್ದಂತೆ ಮೊದಲು ನಾಲ್ವರು ಆರೋಪಿಗಳು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಹೋಗಿ ಶರಣಾದರು. ಈ ನಾಲ್ವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಯಾರ್ಯಾರು ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ
5
+ ಕಲೆ ಹಾಕಿದಾಗ ದರ್ಶನ್ ಮತ್ತು ಪವಿತ್ರಾ ಗೌಡ ಹೆಸರು ಕೇಳಿಬಂದಿದೆ. ಇತರೆ ಆರೋಪಿಗಳ ಮಾಹಿತಿ ಹಾಗೂ ಸಿಸಿಟಿವಿ ಪುಟೇಜ್ಗಳು, ಮತ್ತಿತರ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದಾಗ ದರ್ಶನ್ ಮತ್ತು ಪವಿತ್ರ ಇಬ್ಬರೂ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿರುವುದು ಗೊತ್ತಾಗಿದೆ.
6
+ ಇಬ್ಬರು ಒಟ್ಟಿಗೆ ಶೆಡ್ಗೆ ಹೋಗಿರುವುದು ಹಾಗೂ ಒಟ್ಟಿಗೆ ಹೊರಬಂದಿರುವುದು ತನಿಖೆಯಿಂದ ಗೊತ್ತಾಗಿದೆ. ಪಟ್ಟಣಗೆರೆ ಶೆಡ್ನಲ್ಲಿ ಅಳವಡಿಸಿರುವ ಸಿಸಿಟಿವಿಯು ಈ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಲಿದೆ.
7
+ ರೇಣುಕಾಸ್ವಾಮಿಗೆ ಬಹಳ ಹಿಂಸೆ ನೀಡಿ ಎಲೆಕ್ಟ್ರಿಕ್ ಶಾಕ್ ಕೊಟ್ಟು ಭೀಕರವಾಗಿ ಹತ್ಯೆ ಮಾಡಿರುವುದು ಕಂಡುಬಂದಿದೆ. ಇದೆಲ್ಲದರ ವಿಡಿಯೋ ಹಾಗೂ ತಾಂತ್ರಿಕ, ಪೂರಕ ಸಾಕ್ಷಿಗಳು ದೊರೆತಿರುವ ಹಿನ್ನಲೆಯಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡನನ್ನು ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನಾಗಿ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
eesanje/url_46_105_11.txt ADDED
@@ -0,0 +1,5 @@
 
 
 
 
 
 
1
+ ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಖಂಡಿಸಿ ಜೆಡಿಎಸ್‌‍ ಪ್ರತಿಭಟನೆ
2
+ ಬೆಂಗಳೂರು,ಜೂ.18-ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್‌‍ ನಗರದಲ್ಲಿಂದು ಪ್ರತಿಭಟನೆ ನಡೆಸಿತು.ಬೆಂಗಳೂರು ಮಹಾನಗರ ಜೆಡಿಎಸ್‌‍ ವತಿಯಿಂದ ರಾಜ್ಯಸರ್ಕಾರದ ವಿರುದ್ಧ ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿನ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ಹೆಚ್ಚಳ ಮಾಡಿರುವ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಸುವಂತೆ ಆಗ್ರಹಿಸಲಾಯಿತು.
3
+ ಬೆಂಗಳೂರು ಮಹಾನಗರ ಜೆಡಿಎಸ್‌‍ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ, ವಿಧಾನಪರಿಷತ್‌ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎನ್‌.ಜವರಾಯಿಗೌಡ, ಜೆಡಿಎಸ್‌‍ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ, ರೇವಣ್ಣ ಸೇರಿದಂತೆ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.
4
+ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯಸರ್ಕಾರ ತೈಲಬೆಲೆ ಹೆಚ್ಚಳ ಮಾಡಿ ಗ್ರಾಹಕರಿಗೆ ಹೊರೆಯಾಗಿಸಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆಯೂ ಏರಿಕೆಯಾಗಲಿದ್ದು, ಶ್ರೀಸಾಮಾನ್ಯರಿಗೆ ತೊಂದರೆಯಾಗಲಿದೆ.
5
+ ರಾಜ್ಯಸರ್ಕಾರ ಕೂಡಲೇ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಜೆಡಿಎಸ್‌‍ನ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡು ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
eesanje/url_46_105_12.txt ADDED
@@ -0,0 +1,7 @@
 
 
 
 
 
 
 
 
1
+ ಬಿಬಿಎಂಪಿಯಲ್ಲಿ 1 ಕೆಲಸಕ್ಕೆ 2 ಬಿಲ್‌ ಮಾಡಿ ಲೂಟಿ ಮಾಡಲಾಗುತ್ತಿದೆ : ಕೇಂದ್ರ ಸಚಿವ ಹೆಚ್ಡಿಕೆ ಆರೋಪ
2
+ ಬೆಂಗಳೂರು,ಜೂ.18-ಬಿಬಿಎಂಪಿಯಲ್ಲಿ ಒಂದು ಕೆಲಸಕ್ಕೆ ಎರಡು ಬಿಲ್‌ ಮಾಡಿಕೊಂಡು ಕೋಟ್ಯಂತರ ರೂ. ಲೂಟಿ ಮಾಡಲಾಗುತ್ತಿದೆ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗಳಲ್ಲಿನ ಹಣ ಎಲ್ಲಿ ಹೋಗಿದೆಯೋ, ಏನೋ? ಅದನ್ನು ಕೇಳೋರು ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
3
+ 25 ಸಾವಿರ ಎಕರೆ ಮೇಲೆ ರಾಜ್ಯಸರ್ಕಾರ ಕಣ್ಣು ಹಾಕಿದೆ. ಗ್ಯಾರಂಟಿಯಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುವಾಗ ವಿವೇಕ ಇರಲಿಲ್ಲವೇ?, ಯಾವ ರೀತಿ ಅನುಷ್ಠಾನ ಮಾಡಬೇಕು ಎಂಬುದರ ಬಗ್ಗೆ ಚಿಂತೆ ಮಾಡಬೇಕಿತ್ತಲ್ಲವೇ?, ಹಣಕಾಸು ಸಚಿವರಾಗಿ 14 ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನುಭವ ಇರಲಿಲ್ಲವೇ?, ಮುಂದೇನಾಗಬಹುದು ಎಂಬ ಆಲೋಚನೆಯನ್ನೂ ಮಾಡಲಿಲ್ಲವೇ?, ಹಲವಾರು ಇಲಾಖೆಯಲ್ಲಿ ಹಣ ಸೋರಿಕೆಯಾಗುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದರು.
4
+ ಜನರ ಹೆಸರಿನಲ್ಲಿ ಕಾಂಗ್ರೆಸ್‌‍ ಸರ್ಕಾರ ಲೂಟಿ ಮಾಡಿಕೊಂಡು ಕೂತಿದೆ ಎಂದು ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಉಪಕರವನ್ನು ಹೆಚ್ಚಳ ಮಾಡುವ ಅವಶ್ಯಕತೆ ಏನಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಪ್ರಶ್ನಿಸಿದ್ದಾರೆ.
5
+ ಪೆಟ್ರೋಲ್‌, ಡೀಸೆಲ್‌ ದರವನ್ನು ಕೇಂದ್ರಸರ್ಕಾರ ಕಡಿಮೆ ಮಾಡಬೇಕೆಂದು ಮುಖ್ಯಮಂತ್ರಿಯವರು ಒತ್ತಾಯಿಸಿದ್ದಾರೆ. ಕೇಂದ್ರಸರ್ಕಾರ ದರ ಇಳಿಸುವುದು ಅಥವಾ ಬಿಡುವುದರ ಬಗ್ಗೆ ಆಮೇಲೆ ಚರ್ಚಿಸೋಣ. ಈಗ ತರಾತುರಿಯಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಹೆಚ್ಚಳ ಮಾಡುವುದರ ಅಗತ್ಯವೇನಿತ್ತು? ಯಾವ ಕಾರಣಕ್ಕಾಗಿ ಹೆಚ್ಚಳ ಮಾಡಿದ್ದೀರಿ ಎಂದು ಪ್ರಶ್ನೆಗಳ ಸುರಿಮಳೆಗೈದರು.
6
+ ಕೇಂದ್ರ ಸರ್ಕಾರವನ್ನು ಬೆಲೆ ಇಳಿಸುವಂತೆ ಇಷ್ಟು ದಿನ ಏಕೆ ಕೇಳಲಿಲ್ಲ? ಸರ್ಕಾರದಲ್ಲಿ ಹಣದ ಕೊರತೆ ಉಂಟಾಗಿರುವುದರಿಂದ ಸೆಸ್‌‍ ಮೂಲಕ 3 ಸಾವಿರ ಕೋಟಿ ರೂ. ಸಂಗ್ರಹಿಸಲು ತೈಲಬೆಲೆ ಹೆಚ್ಚಳ ಮಾಡಿದ್ದೀರ. ಜನರ ಜೇಬಿನಿಂದ ಕಿತ್ತುಕೊಳ್ಳಲು ಹೊರಟಿದ್ದೀರ. ಗ್ಯಾರಂಟಿ ಅನುಷ್ಠಾನಗೊಳಿಸುವುದಾಗಿ ಹೇಳಿ ಜನರಿಂದ ತೆಗೆದುಕೊಂಡು, ಜನರಿಗೇ ಕೊಡುವುದಕ್ಕೆ ನೀವೇ ಬೇಕಾ? ಯಾರು ಬೇಕಾದರೂ ಇಂತಹ ಆಡಳಿತ ನಡೆಸುತ್ತಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
7
+ ನಟ ದರ್ಶನ್‌ ಮೇಲಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗಮನ ಸೆಳೆದಾಗ ಕುಮಾರಸ್ವಾಮಿಯವರು, ಈ ವಿಚಾರದಲ್ಲಿ ನನ್ನನ್ನು ಏಕೆ ಎಳೆದು ತರುತ್ತೀರಿ ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಲು ನಿರಾಕರಿಸಿದರು.
eesanje/url_46_105_2.txt ADDED
@@ -0,0 +1,6 @@
 
 
 
 
 
 
 
1
+ ನಕಲಿ ಕೀ ಬಳಸಿ ಬಾಡಿಗೆ ನೀಡಿದ್ದ ಮನೆಯನ್ನೇ ದೋಚಿದ ಮನೆ ಮಾಲೀಕ..!
2
+ ಮೈಸೂರು,ಜೂ. 19-ನಕಲಿ ಕೀ ಬಳಸಿ ಬಾಡಿಗೆ ನೀಡಿದ್ದ ಮನೆಯನ್ನ ಮಾಲೀಕನೇ ದೋಚಿದ ಘಟನೆ ಮೈಸೂರಿನ ಲೋಕನಾಯಕ ನಗರದಲ್ಲಿ ನಡೆದಿದೆ.ಸರ್ವಸ್ವವನ್ನೂ ಕಳೆದುಕೊಂಡ ಬಾಡಿಗೆದಾರ ಇದೀಗ ಅತಂತ್ರವಾಗಿದ್ದಾರೆ.ಡ್‌ ಪ್ರಾಡಕ್ಟ್‌್ಸ ಡಿಸ್ಟ್ರಿಬ್ಯೂಟರ್‌ ಆಗಿರುವ ಮೇಘರಾಜ್‌ ರವರ ಕುಟುಂಬ ಇದೀಗ ಅತಂತ್ರಕ್ಕೆ ಸಿಲುಕಿದೆ.
3
+ ಮಾಲೀಕ ಮಂಜುನಾಥ್‌ ಹಾಗೂ ಈತನ ಸಹೋದರನ ಮೇಲೆ ಮೇಘರಾಜ್‌ ರವರು ಮೇಟಗಳ್ಳಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಂಜುನಾಥ್‌ರವರಿಗೆ ಸೇರಿದ ಮನೆಗೆ ಮೇಘರಾಜ್‌ ಸುಮಾರು 6 ತಿಂಗಳ ಹಿಂದೆ ಬಾಡಿಗೆ ಪಡೆದು ವಾಸಕ್ಕೆ ಬಂದಿದ್ದಾರೆ. ಬಾಡಿಗೆ ವಿಚಾರದಲ್ಲಿ ಮೇಘರಾಜ್‌ ಹಾಗೂ ಮಂಜುನಾಥ್‌ ನಡುವೆ ವಿವಾದ ಶುರುವಾಗಿದೆ. ತಾವು ನೀಡಿದ್ದ ಮುಂಗಡ ಹಣ ವಾಪಸ್‌‍ ಪಡೆದು ಮನೆ ಖಾಲಿ ಮಾಡಲು ಮೇಘರಾಜ್‌ ನಿರ್ಧರಿಸಿದ್ದಾರೆ. ಇದಕ್ಕೆ ಒಪ್ಪದ ಮಂಜುನಾಥ್‌ ಮನೆಗೆ ಬೀಗ ಜಡಿದಿದ್ದಾರೆ.
4
+ ಈ ಕುರಿತಂತೆ ಮೇಘರಾಜ್‌ ಮೇಟಗಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ. ಮಂಜುನಾಥ್‌ ರವರನ್ನ ಕರೆಸಿ ಪೊಲೀಸರು ಬುದ್ದಿವಾದ ಹೇಳಿ ಬೀಗ ತೆಗೆಸಿದ್ದಾರೆ. ಹೀಗಿದ್ದರೂ ಆಗಾಗ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಕಿರುಕುಳ ನೀಡಿದ್ದಾರೆ.
5
+ ಕೆಲ ದಿನಗಳ ಹಿಂದೆ ಮೇಘರಾಜ್‌ ರವರು ಕುಟುಂಬ ಸಮೇತ ತಮ ಸ್ವಂತ ಊರಾದ ಕಬ್ಬಳಿಗೆರೆಗೆ ತೆರಳಿದ್ದಾರೆ. ಹಿಂದಿರುಗಿ ಬರುವಷ್ಟರಲ್ಲಿ ಮಂಜುನಾಥ್‌ ಮತ್ತೆ ಮನೆಗೆ ಬೀಗ ಹಾಕಿದ್ದಾರೆ. ಕಿಟಕಿ ಮೂಲಕ ಮನೆ ಒಳಗೆ ಪರಿಶೀಲಸಿದಾಗ ಪೀಠೋಪಕರಣಗಳ ಸಮೇತ ನಗದು ಚಿನ್ನಾಭರಣ ನಾಪತ್ತೆಯಾಗಿದೆ.
6
+ ಸುಮಾರು 85 ಗ್ರಾಂ ಚಿನ್ನಾಭರಣ,1.20 ಲಕ್ಷ ನಗದು, ಫ್ರಿಡ್ಜ್ , ವಾಶಿಂಗ್‌ ಮೆಷಿನ್‌, ಹರ್ಬಲ್‌ ಪ್ರಾಡಕ್ಟ್‌್ಸ ಗಳು ನಾಪತ್ತೆಯಾಗಿವೆ.ನಕಲಿ ಕೀ ಬಳಸಿ ಮಾಲೀಕ ಮಂಜುನಾಥ್‌ ತಮ ಪದಾರ್ಥಗಳನ್ನು ದೋಚಿದ್ದಾರೆಂದು ಮೇಘರಾಜ್‌ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
eesanje/url_46_105_3.txt ADDED
@@ -0,0 +1,5 @@
 
 
 
 
 
 
1
+ ಅಣ್ಣಾವ್ರ ಕುಟುಂಬದ ಮೇಲಿನ ಅಭಿಮಾನ ತುಂಬಿದ ಮದುವೆಯ ಕರೆಯೋಲೆ
2
+ ಮೈಸೂರು,ಜೂ19-ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ ರವರು ರಸಿಕರರಾಜ ಡಾ.ರಾಜ್‌ಕುಮಾರ್‌ರವರ ಕಟ್ಟಾ ಅಭಿಮಾನಿ.
3
+ ಡಾ.ರಾಜ್‌ರವರ ಹುಟ್ಟುಹಬ್ಬವಿರಲಿ, ಪುಣ್ಯತಿಥಿಯಾಗಲಿ ಯಾವುದೇ ಕಾರ್ಯಕ್ರಮವಿದ್ದರೂ ಮುಂದೆ ನಿಲ್ಲುವ ಫ್ಯಾನ್ .ಜೂ. 23ರಂದು ಮಹದೇವಸ್ವಾಮಿರವರ ಮಗಳು ಕಾವ್ಯರವರ ವಿವಾಹ ಮಹೋತ್ಸವ ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಕನಕ ಸಮುದಾಯ ಭವನದಲ್ಲಿ ನೆರವೇರಲಿದೆ.ನಂಜನಗೂಡಿನ ಸುಪ್ರೀತ್‌ ಹೆಚ್‌.ಸುರೇಶ್‌ರವರನ್ನು ಕಾವ್ಯ ವರಿಸಲಿದ್ದಾರೆ.
4
+ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಮಹದೇವಸ್ವಾಮಿ ರವರು ನೆಚ್ಚಿನ ನಟನ ಭಾವಚಿತ್ರದೊಂದಿಗೆ ಹಾಗೂ ಇಡೀ ಕುಟುಂಬದ ಆಶೀರ್ವಾದ ಕೋರಿ ಮುದ್ರಿಸಿದ್ದಾರೆ.ಡಾ.ರಾಜ್‌ ದಂಪತಿ, ಪುತ್ರರಾದ ಡಾ. ಶಿವರಾಜ್‌ಕುಮಾರ್‌ ದಂಪತಿ, ರಾಘವೇಂದ್ರ ರಾಜ್‌ಕುಮಾರ್‌ ದಂಪತಿ ಹಾಗೂ ಪುನೀತ್‌ ರಾಜ್‌ಕುಮಾರ್‌ ದಂಪತಿಯ ಭಾವಚಿತ್ರಗಳನ್ನು ಮದುವೆ ಕರೆಯೋಲೆಯಲ್ಲಿ ಮುದ್ರಿಸಿ ತಮ ಅಭಿಮಾನವನ್ನು ಮೆರೆದಿದ್ದಾರೆ.
5
+ ಜೊತೆಗೆ ಡಾ.ರಾಜ್‌ಕುಮಾರ್‌ ಸಂಘದ ರಾಜ್ಯಾಧ್ಯಕ್ಷರಾದ ಸಾ.ರಾ.ಗೋವಿಂದ್‌ರವರ ಭಾವಚಿತ್ರವನ್ನೂ ಸಹ ಮುದ್ರಿಸಿದ್ದಾರೆ.ಮಹದೇವ್‌ ರವರ ಕಟ್ಟಾ ಅಭಿಮಾನಕ್ಕೆ ಸಾರ್ವಜನಿಕರೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
eesanje/url_46_105_4.txt ADDED
@@ -0,0 +1,5 @@
 
 
 
 
 
 
1
+ ಹುಬ್ಬಳ್ಳಿಯಲ್ಲಿ ಸಿಟಿ ರವಿ ವಿರುದ್ಧ ದೂರು ದಾಖಲು
2
+ ಹುಬ್ಬಳ್ಳಿ,ಜೂ.19-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್‌‍ ಠಾಣೆಗೆ ದೂರು ಸಲ್ಲಿಕೆ ಆಗಿದೆ. ತೈಲದರ ಏರಿಕೆ ಖಂಡಿಸಿ ನಿನ್ನೆ ಬಿಜೆಪಿ ನಾಯಕರು ಧರಣಿ ನಡೆಸಿದ್ದರು.
3
+ ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು ಸಿದ್ದರಾಮಯ್ಯರವರನ್ನು ಟೀಕಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಅಗೌರವ ತೋರಿದ್ದಾರೆ ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅವರು ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ.
4
+ ರಾಜ್ಯದಲ್ಲಿ ಪೆಟೋಲ್‌ ಹಾಗೂ ಡೀಸೆಲ್‌ ದರ ಏರಿಕೆಗೆ ಬಿಜೆಪಿ ಆಕೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ನಾಯಕರು ಹೋರಾಟ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ, ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡೋದು.
5
+ ಭಂಡತನದ ಸಮರ್ಥನೆ ಬಿಟ್ಟು ಯಾಕೆ ಸೆಸ್‌‍ ಹಾಕೀರೋದು ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದರು. ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌, ಸಿ.ಟಿ ರವಿ, ಅಶ್ವತ್ಥನಾರಾಯಣ್‌ ಸೇರಿದಂತೆ ಶಾಸಕರು, ಪರಿಷತ್‌ ಸದಸ್ಯರು ಭಾಗಿಯಾಗಿದ್ದರು.
eesanje/url_46_105_5.txt ADDED
@@ -0,0 +1,5 @@
 
 
 
 
 
 
1
+ ಪ್ರಜ್ವಲ್‌ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ
2
+ ಬೆಂಗಳೂರು,ಜೂ.18-ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರಿಗೆ 42ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಪ್ರಜ್ವಲ್‌ ರೇವಣ್ಣ ಅವರ ಎಸ್‌‍ಐಟಿ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ನೀಡಬೇಕೆಂದು ಮಾಡಿದ ಮನವಿಯನ್ನು ನಿರಾಕರಿಸಿದ ನ್ಯಾಯಾಲಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತು.
3
+ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅವರು ವಿದೇಶಕ್ಕೆ ಪರಾರಿಯಾಗಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್‌‍ಐಟಿ ರಚನೆ ಮಾಡಿತ್ತು. ಅವರು ವಿದೇಶದಿಂದ ಬರುತ್ತಿದ್ದಂತೆ ಅವರನ್ನು ವಶಕ್ಕೆ ಪಡೆದ ಎಸ್‌‍ಐಟಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದಿತ್ತು.
4
+ ಎರಡು ಪ್ರಕರಣದಲ್ಲಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿರುವ ಪೊಲೀಸರು ಇಂದು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹೊಳೆನರಸೀಪುರದಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ವಿಚಾರಣೆಯನ್ನು ಅಂತ್ಯಗೊಳಿಸಿರುವ ಎಸ್ಐಟಿ ಮತ್ತೊಂದು ಪ್ರಕರಣದಲ್ಲಿ ವಿಚಾರಣೆ ನಡೆಸಲು ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಸರ್ಕಾರಿ ಪರ ವಕೀಲರು ಮನವಿ ಮಾಡಿದರು.
5
+ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಜ್ವಲ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಮೂರನೇ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಬಾಡಿ ವಾರಂಟ್‌ ಪಡೆಯಲು ಅರ್ಜಿ ಸಲ್ಲಿಸಲು ನ್ಯಾಯಾಲಯ ಸೂಚಿಸಿದೆ.
eesanje/url_46_105_6.txt ADDED
@@ -0,0 +1,6 @@
 
 
 
 
 
 
 
1
+ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು
2
+ ಬೆಂಗಳೂರು,ಜೂ.18– ಕೆ.ಆರ್‌ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣರಿ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ನ್ಯಾಯಮೂರ್ತಿ ಕೃಷ್ಣ.ಎಸ್‌‍ ದೀಕ್ಷಿತ್‌ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ ಈ ತೀರ್ಪನ್ನು ನೀಡಿ, ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಕರೆದಾಗ ಮೈಸೂರು ಮತ್ತು ಹಾಸನಕ್ಕೂ ಬರಬೇಕು.
3
+ ಎಂದು ಸೂಚನೆ ನೀಡಿ ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು.ಭವಾನಿ ರೇವಣ್ಣ ಅವರು ಎಸ್‌‍ಐಟಿಯ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ ಎಂದು ಪ್ರಾಸಿಕ್ಯೂಷನ್‌ ವಾದವನ್ನು ತಳ್ಳಿ ಹಾಕಿರುವ ನ್ಯಾಯಾಲಯ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದರು.
4
+ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ತನಿಖೆಗೆ ಅಸಹಕಾರ ತೋರುತ್ತಿದ್ದಾರೆ. ನ್ಯಾಯಾಲಯ ನೀಡಿದ ನಿರ್ದೇಶನದಂತೆ ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ. ಇದರಿಂದ ತನಿಖೆ ಮುಂದುವರೆಸಲಾಗುತ್ತಿಲ್ಲ. ಅವರು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪ್ರಶ್ನೆಗಳಿಗೆ ಸಮಂಜಸ ಉತ್ತರ ನೀಡುತ್ತಿಲ್ಲ.
5
+ ಹೀಗಾಗಿ ಅವರನ್ನು ಬಂಧಿಸಿಯೇ ವಿಚಾರಣೆಗೆ ಒಳಪಡಿಸಬೇಕಾಗಿದೆ. ಹಾಗಾಗಿ ಅವರಿಗೆ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕೆಂದು ಸರ್ಕಾರಿ ಪರ ವಕೀಲರು ಮನವಿ ಮಾಡಿದ್ದರು. ಮಹಿಳೆಯ ಅಪಹರಣದ ಹಿಂದಿನ ಸೂತ್ರಧಾರಿ ಅವರೇ ಆಗಿದ್ದಾರೆ. ಎಲ್ಲ ಆರೋಪಿಗಳೊಂದಿಗೆ ಅವರು ಸಂಪರ್ಕದಲ್ಲಿದ್ದಾರೆ. ಅದಕ್ಕೆ ಸಾಕ್ಷಿಗಳಿವೆ. ಅವರು ಸರಿಯಾದ ಉತ್ತರ ನೀಡುತ್ತಿಲ್ಲ ಎಂದು ಹೇಳಿದ್ದರು.
6
+ ಆಗ ನ್ಯಾಯಮೂರ್ತಿಗಳು ಪ್ರಾಸಿಕ್ಯೂಷನ್‌ ಕೇಳಿದ ಪ್ರಶ್ನೆಗೆ ಉತ್ತರ ಹೇಳುವುದು, ಬಿಡುವುದು ಆರೋಪಿಗೆ ಬಿಟ್ಟ ವಿಚಾರ. ಜೊತೆಗೆ ನೀವು ಹೀಗೆ ಉತ್ತರ ನೀಡಬೇಕೆಂದು ಬಯಸುವುದು ಸರಿಯಲ್ಲ. ಅನಗತ್ಯ ಪ್ರಶ್ನೆಗಳನ್ನು ಕೇಳಿದಾಗ ಅವರು ಉತ್ತರ ನೀಡದೇ ಇರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿ ತನಿಖೆಯ ವೇಳೆ ಕೇಳಲಾದ ಪ್ರಶ್ನೆಗಳು ಮತ್ತು ಉತ್ತರಗಳ ಪ್ರತಿಯನ್ನು ನೀಡುವಂತೆ ಸೂಚಿಸಿ, ವಾದ-ಪ್ರತಿವಾದ ಆಲಿಸಿ ಇಂದಿಗೆ ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ನ್ಯಾಯಮೂರ್ತಿ ದೀಕ್ಷಿತ್‌ ಅವರು , ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.
eesanje/url_46_105_7.txt ADDED
@@ -0,0 +1,5 @@
 
 
 
 
 
 
1
+ ಹೊಸಕೋಟೆ : ನಡು ರಸ್ತೆಯಲ್ಲೇ ಚಿಕ್ಕಮ್ಮನ ಕೊಲೆ
2
+ ಹೊಸಕೋಟೆ, ಜೂ.18-ಕೌಟುಂಬಿಕ ಕಲಹದಿಂದ ನಡುರಸ್ತೆಯಲ್ಲಿ ಚಿಕ್ಕಮ್ಮನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ರುವ ಘಟನೆ ಹೊಸಕೋಟೆ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೊಮಸಂದ್ರದ ನಿವಾಸಿ ಚಂದ್ರಮ್ಮ(40) ಕೊಲೆಯಾದ ದುರ್ದೈವಿ.
3
+ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್‌ ಹಾಗೂ ಈತನ ಚಿಕ್ಕಮ ಚಂದ್ರಮನ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ರಾತ್ರಿಯೂ ಸಹ ಇದೇ ವಿಚಾರವಾಗಿ ಜಗಳ ನಡೆದಿದ್ದು, ಚಿಕ್ಕಮನ ವಿರುದ್ಧ ವೆಂಕಟೇಶ್‌ ಕೋಪಗೊಂಡಿದ್ದನು.
4
+ ಚಂದ್ರಮ ದಾರಿಯಲ್ಲಿ ನಡೆದು ಹೋಗುತ್ತಿದ್ದಾಗ ನಡುರಸ್ತೆಯಲ್ಲೇ ಅಡ್ಡಗಟ್ಟಿದ ವೆಂಕಟೇಶ್‌ ದೊಣ್ಣೆಯಿಂದ ಚಂದ್ರಮ ಅವರ ತಲೆಗೆ ಹೊಡೆದು ಪರಾರಿಯಾಗಿದ್ದಾನೆ.ಸ್ಥಳದಲ್ಲೇ ಕುಸಿದು ಬಿದ್ದ ಚಂದ್ರಮ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
5
+ ಸುದ್ದಿ ತಿಳಿದು ಹೊಸಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ಕೈಗೊಂಡಿದ್ದಾರೆ.
eesanje/url_46_105_8.txt ADDED
@@ -0,0 +1,7 @@
 
 
 
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣ : ಪೊಲೀಸರಿಂದ ಮೈಸೂರಿನಲ್ಲಿ ಸ್ಥಳ ಮಹಜರು
2
+ ಮೈಸೂರು, ಜೂ. 18-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಇಂದು ಮೈಸೂರಿಗೆ ಕರೆತಂದು ಸ್ಥಳ ಮಹಜರು ನಡೆಸಲಾಯಿತು.ಆರೋಪಿಗಳಾದ ದರ್ಶನ್ ಆಪ್ತ ವ್ಯವಸ್ಥಾಪಕ ನಾಗರಾಜು, ಕಾರಿನ ಚಾಲಕ ಲಕ್ಷ್ಮಣ್ ಇಬ್ಬರನ್ನು ಮೈಸೂರಿಗೆ ಕರೆತಂದು ಇಂದು ಸ್ಥಳ ಮಹಜರು ನಡೆಸಲಾಯಿತು.
3
+ ಮೈಸೂರಿನ ರ್ಯಾಡಿಸನ್ ಬ್ಲೂ ಹೊಟೇಲ್ಗೆ ಆರೋಪಿಗಳನ್ನು ಕರೆತಂದ ಬೆಂಗಳೂರಿನ ವಿಜಯನಗರ ಉಪವಿಭಾಗದ ಪೊಲೀಸರು ಸ್ಥಳ ಮಹಜರು ನಡೆಸಿದರು.ನಟ ದರ್ಶನ್ನನ್ನು ರ್ಯಾಡಿಸನ್ಬ್ಲೂ ಹೊಟೇಲ್ನಲ್ಲಿ ವಶಕ್ಕೆ ಪಡೆಯಲಾಯಿತು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರಿಗಾಗಿ ಆರೋಪಿಗಳಿಬ್ಬರನ್ನು ಪೊಲೀಸರು ಕರೆತಂದು ಮಹಜರು ನಡೆಸಿದ್ದಾರೆ.
4
+ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ನಂತರ ದರ್ಶನ್ ಮೈಸೂರಿಗೆ ಆಗಮಿಸಿ ರ್ಯಾಡಿಷನ್ ಬ್ಲೂ ಹೊಟೇಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಹಾಗೆಯೇ ಲಲಿತ ಮಹಲ್ನಲ್ಲಿ ನಡೆದ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿಯೂ ಸಹ ದರ್ಶನ್ ಭಾಗವಹಿಸಿದ್ದರು.ದರ್ಶನ್ರನ್ನು ಬಂಧಿಸುವ ದಿನ ದರ್ಶನ್ ಈ ಹೊಟೇಲ್ನಿಂದ ಮೈಸೂರಿನ ಕುವೆಂಪು ನಗರದಲ್ಲಿರುವ ಗೋಲ್ಡ್ ಜಿಮ್ಗೆ ತೆರಳಿ ಅಲ್ಲಿ ವರ್ಕೌಟ್ ಮಾಡಿ ನಂತರ ಆಗಮಿಸಿದಾಗ ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡರು.
5
+ ರ್ಯಾಡಿಸನ್ ಬ್ಲೂ ಹೊಟೇಲ್ ಸ್ಥಳಮಹಜರು ನಂತರ ದರ್ಶನ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಹೊಟೇಲ್ ಲಲಿತ ಮಹಲ್ ಆ ನಂತರ ದರ್ಶನ್ ಫಾರ್ಮ್ಹೌಸ್ನಲ್ಲೂ ಸ್ಥಳ ಮಹಜರು ನಡೆಸಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಇಂದು ಬೆಳಗ್ಗೆ ದರ್ಶನ್ ಫಾರ್ಮ್ಹೌಸ್ಗೆ ಆರೋಪಿಗಳಾದ ನಾಗರಾಜ್ ಮತ್ತು ಲಕ್ಷ್ಮಣ್ನನ್ನು ಕರೆದೊಯ್ದು ಪರಿಶೀಲಿಸಿದರು.
6
+ ದರ್ಶನ್ನನ್ನು ಮಹಜರಿಗೆ ಫಾರ್ಮ್ಹೌಸ್ಗೆ ಕರೆದೊಯ್ದರೆ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಅಭಿಮಾನಿಗಳನ್ನು ನಿರ್ವಹಿಸುವುದು ಬಹಳ ಕಷ್ಟವೆಂದು ಅರಿತು ಪೊಲೀಸರು ದರ್ಶನ್ನನ್ನು ಕರೆದೊಯ್ಯದೆ ಇನ್ನಿಬ್ಬರು ಆರೋಪಿಗಳನ್ನು ಕರೆದೊಯ್ದು ಫಾರ್ಮ್ಹೌಸ್ನಲ್ಲಿ ಸ್ಥಳ ಮಹಜರು ಮಾಡಿದರು.
7
+ ರೇಣುಕಾಸ್ವಾಮಿ ಕೊಲೆ ಬಳಿಕ ದರ್ಶನ್ ಮೈಸೂರಿಗೆ ತೆರಳಿದ್ದ ಮಾಹಿತಿ ಹಿನ್ನೆಲೆಯಲ್ಲಿ ಅವರ ಫಾರ್ಮ್ಹೌಸ್ನಲ್ಲಿ ಸ್ಥಳ ಮಹಜರು ಮಾಡಿ ಕೆಲವೊಂದು ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ನಂತರ ಆರೋಪಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ.
eesanje/url_46_105_9.txt ADDED
@@ -0,0 +1,8 @@
 
 
 
 
 
 
 
 
 
1
+ ಪೊಲೀಸರ ಸಮಯ ಪ್ರಜ್ಞೆಯಿಂದ ರೇಣುಕಾಸ್ವಾಮಿ ಪ್ರಕರಣ ಬಯಲು : ಬಿ.ದಯಾನಂದ
2
+ ಬೆಂಗಳೂರು, ಜೂ.18-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು ಎಂದು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರ ಸಮಯ ಪ್ರಜ್ಞೆ ಹಾಗೂ ಕರ್ತವ್ಯ ಪ್ರಜ್ಞೆ ಯಿಂದ ಪ್ರಕರಣ ಹೊರ ಬಂದಿದ್ದು, ಸೆಲಬ್ರಿಟಿಗಳನ್ನು ಸಹ ಬಂಧಿಸಲಾಗಿದೆ ಎಂದು ವಿವರಿಸಿದರು.
3
+ ಈ ಪ್ರಕರಣವನ್ನು ಬೇರೆ ಬೇರೆ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಸಮರ್ಪಕ ರೀತಿಯಲ್ಲಿ ತನಿಖೆ ನಡೆಯುತ್ತಿದ್ದು, ತನಿಖೆ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ ಎಂದರು.
4
+ ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರ ಬಂದಿದೆ. ವ್ಯಕ್ತಿಯ ಕೊಲೆ ಮಾಡಿರುವುದು ಹೀನ, ಅತ್ಯಂತ ಹೇಯ ಕೃತ್ಯ. ರೇಣುಕಾಸ್ವಾಮಿ ಕುಟುಂಬಕ್ಕೆ ನಾವು ನ್ಯಾಯ ಒದಗಿಸಿಕೊಡಬೇಕು. ಆದ್ದರಿಂದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದು ಅವರು ಹೇಳಿದರು.
5
+ ಇದು ಗಂಭೀರ ಪ್ರಕರಣವಾಗಿರುವುದರಿಂದ ಎಲ್ಲಾ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸುತ್ತೇವೆ. ಈ ಪ್ರಕರಣದ ಗಂಭೀರತೆ ಅರಿತು ವಿಜಯನಗರ ಉಪವಿಭಾಗದ ಎಸಿಪಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.ಆ ವಿಭಾಗದ ಎಲ್ಲಾ ಇನ್‌್ಸಪೆಕ್ಟರ್ಗಳು ಹಾಗೂ ಸಿಬ್ಬಂದಿ ತನಿಖಾ ತಂಡದಲ್ಲಿದ್ದಾರೆ.
6
+ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆ ತರಲಾಗಿದೆ. ಕೆಲವು ಆರೋಪಿಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಆದ್ದರಿಂದ ಚಿತ್ರದುರ್ಗ, ಮೈಸೂರು, ಬೆಂಗಳೂರು ನಗರ ಹಾಗೂ ಇನ್ನಿತರ ಕಡೆ ತನಿಖೆ ಮತ್ತು ಸ್ಥಳ ಮಹಜರು ಮಾಡಬೇಕಾಗಿದೆ. ಆದ್ದರಿಂದ ಹಲವು ಆಯಾಮಗಳಲ್ಲಿ ಒಬ್ಬೊಬ್ಬ ಇನ್ಸ್ ಪೆಕ್ಟರ್ ಒಂದೊಂದು ಕಡೆ ಹೋಗಿ ತನಿಖೆ ನಡೆಸಿ ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದಾರೆ ಎಂದು ಆಯುಕ್ತರು ಹೇಳಿದರು.
7
+ ಈ ಪ್ರಕರಣದಲ್ಲಿ ಸೆಲೆಬ್ರೆಟಿಗಳು ಇರುವುದರಿಂದ ಬಹಳ ಜಾಗರೂಕತೆಯಿಂದ ಹಲವು ಸಾಕ್ಷ್ಯಾಧಾರಗಳನ್ನು ಕಲೆಹಾಕಲಾಗುತ್ತಿದೆ. ಊಹಾ-ಪೋಹಾಗಳಿಗೆ ಕಿವಿಗೆಡಬೇಡಿ. ತನಿಖೆಯ ಭಾಗವಲ್ಲದ ಕೆಲವು ಉತೆ್ಪ್ರೕಕ್ಷಗಳು, ಅನೇಕ ಅಂಶಗಳು ಕೇಳಿ ಬರುತ್ತಿದೆ. ಇದು ಸಲ್ಲದು. ನಾವು ಈ ಪ್ರಕರಣವನ್ನು ಕಾನೂನಿನ ಮುಂದೆ ತೆಗೆದುಕೊಂಡು ಹೋಗಬೇಕಾಗಿದೆ. ದಯವಿಟ್ಟು ತಾಳೆ- ಸಹನೆಯಿಂದ ನಮೊಂದಿಗೆ ಸಹಕರಿಸಿದರೆ ಸಮಗ್ರವಾಗಿ ತಾತ್ವಿಕ ಹಂತಕ್ಕೆ ಈ ಪ್ರಕರಣವನ್ನು ತೆಗೆದುಕೊಂಡು ಹೋಗಲು ಸಹಕರಿಯಾಗುತ್ತದೆ. ನಾವೆಲ್ಲರೂ ಸೇರಿ ಜವಾಬ್ದಾರಿಯಿಂದ ಈ ಪ್ರಕರಣವನ್ನು ಬಗೆಹರಿಸಬೇಕಿದೆ ಎಂದರು.
8
+ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ ಸೆಲೆಬ್ರಿಟಿ ಸೇರಿದಂತೆ ಒಟ್ಟು 17ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕೂಲಂಕುಷವಾಗಿ ತನಿಖೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
eesanje/url_46_106_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ದರ್ಶನ್‌ ಜೊತೆ ಸಂಪರ್ಕದಲ್ಲಿದ್ದವರೆಲ್ಲಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲು ಸಾಧ್ಯವಿಲ್ಲ : ಪರಮೇಶ್ವರ್‌
2
+
3
+ ಬೆಂಗಳೂರು,ಜೂ.18– ನಟ ದರ್ಶನ್‌ ಜೊತೆ ಸಂಪರ್ಕದಲ್ಲಿದ್ದವರೆಲ್ಲಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಲಭ್ಯವಿರುವ ಸಾಕ್ಷಿಗಳ ಆಧಾರದ ಮೇಲೆ ತನಿಖೆ ಮುಂದುವರೆಯಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್‌ ನಟರಾಗಿರುವುದರಿಂದಾಗಿ ಬಹಳಷ್ಟು ಮಂದಿ ಒಂದಲ್ಲಾ ಒಂದು ರೀತಿ ಸಂಪರ್ಕದಲ್ಲಿರುತ್ತಾರೆ. ಅಂದ ಮಾತ್ರಕ್ಕೆ ಕೊಲೆಗೆ ಸಂಪರ್ಕವಿದೆ, ಭಾಗಿಯಾಗಿದ್ದಾರೆ ಎಂದು ಹೇಳಲು ಬರುವುದಿಲ್ಲ. ತನಿಖೆಯ ಹಂತದಲ್ಲಿ ದೊರೆಯುವ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಮುಂದುವರೆಸುತ್ತಾರೆ. ಅಗತ್ಯವಾದರೆ ಸಂಪರ್ಕದಲ್ಲಿದ್ದವರನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ಹೇಳಿದರು.
5
+ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಗೆ ಸಂಬಂಧಪಟ್ಟಂತೆ ಪ್ರತಿಭಟನೆ ನಡೆಸುವುದು ಪ್ರತಿಪಕ್ಷ ಬಿಜೆಪಿಯವರ ಹಕ್ಕು. ಆಡಳಿತ ನಡೆಸುವುದು ನಮ ಹಕ್ಕು. ನಮಗೂ ಅವರಿಗೂ ಇಷ್ಟೇ ವ್ಯತ್ಯಾಸ ಎಂದರು.
6
+ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆ ಹೆಚ್ಚಳದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರು ಇತ್ತೀಚೆಗೆ ಪ್ರತಿಯೊಂದರಲ್ಲೂ ರಾಜಕಾರಣ ಮಾಡುತ್ತಾರೆ. ದೇಶದಲ್ಲಿ 14 ಬಾರಿ ಪೆಟ್ರೋಲ್‌, ಡೀಸೆಲ್‌ ದರವನ್ನು ಹೆಚ್ಚಿಸಿದರೂ ಅದನ್ನು ಮರೆತು ಹೋದಂತಿದೆ. ಕಚ್ಚಾತೈಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಿದ್ದಾಗಲೂ ಬೆಲೆ ಹೆಚ್ಚಿಸಿ ಸಂಗ್ರಹಿಸಿದ ಹಣ ಎಲ್ಲಿ ಹೋಯಿತು ಎಂದು ಹೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
7
+ ಪಿಎಸ್‌‍ಐ ನೇಮಕಾತಿ ವಿಷಯವಾಗಿ ಇನ್ನೆರೆಡು ವಾರಗಳಲ್ಲಿ ಅಂತಿಮ ಘಟ್ಟ ತಲುಪಲಾಗುವುದು, ಈಗಾಗಲೇ ಎರಡು-ಮೂರು ಸಭೆಗಳನ್ನು ನಡೆಸಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಪ್ರಸ್ತಾಪಿಸಲಾಗಿದ್ದು, ಅದನ್ನು ಬಗೆಹರಿಸಲಾಗುವುದು ಎಂದು ಹೇಳಿದರು.
8
+ ನಟ ದರ್ಶನ್‌ ಮತ್ತು ಅವರ ಗ್ಯಾಂಗ್‌ನಿಂದ ಹತ್ಯೆಯಾಗಿದ್ದಾರೆ ಎಂದು ಹೇಳಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳುತ್ತೇನೆ ಹಾಗೂ ಕಲುಷಿತ ನೀರಿನ ಪ್ರಕರಣದಿಂದ ಸಂಕಷ್ಟಕ್ಕೊಳಗಾದ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮಕ್ಕೂ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.
9
+ ರಾಹುಲ್‌ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟು ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಆ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಭಾರತ್‌ ಜೋಡೊದಂತಹ ಪಾದಯಾತ್ರೆ ನಡೆಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಪಕ್ಷವನ್��ು ಕಟ್ಟಿ ಹೊಸತನವನ್ನು ತಂದುಕೊಟ್ಟಿದ್ದಾರೆ.
10
+ ಈಗ ಅವರು ಲೋಕಸಭೆಯ ವಿರೋಧಪಕ್ಷದ ನಾಯಕರಾಗಬೇಕು ಎಂಬುದು ನಮೆಲ್ಲರ ನಿರೀಕ್ಷೆ. ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದು ಹೇಳಿದರು.ರಾಹುಲ್‌ಗಾಂಧಿಯವರು ವಿರೋಧಪಕ್ಷದ ನಾಯಕರಾಗಿ ಅವರ ವ್ಯಕ್ತಿತ್ವಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂದರು.
eesanje/url_46_106_10.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ತಕ್ಷಣವೇ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟ : ವಿಜಯೇಂದ್ರ ವಾರ್ನಿಂಗ್
2
+ ಬೆಂಗಳೂರು,ಜೂ.17-ಏರಿಕೆ ಮಾಡಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಸರ್ಕಾರ ತಕ್ಷಣವೇ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು. ವರ್ತಿಸುತ್ತಿರುವ ಕಾಂಗ್ರೆಸ್‌‍ ಸರ್ಕಾರಕ್ಕೆ ಅಹಂಕಾರ ಮತ್ತು ದರ್ಪವನ್ನು ಇಳಿಸುವುದು ಜನರಿಗೆ ಗೊತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
3
+ ಪಕ್ಷದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌‍ ಅಹಂಕಾರ ಮತ್ತು ದರ್ಪದಿಂದ ವರ್ತಿಸುತ್ತಿದೆ. ಮುಂದಿನ ವಾರ ನಾವು ಮತ್ತು ಜೆಡಿಎಸ್‌‍ನವರು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಸ್ತೆ ತಡೆ ನಡೆಸಲಿದ್ದೇವೆ. ಬೆಲೆ ಹಿಂತೆಗೆದುಕೊಳ್ಳುವವರೆಗೂ ನಮ ಹೋರಾಟ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ. ನಮ ಹೋರಾಟ ಉಗ್ರ ಸ್ವರೂಪ ಪಡೆಯುತ್ತದೆ ಎಂದು ಎಚ್ಚರಿಕೆ ಕೊಟ್ಟರು.
4
+ ರೈತರು, ಬಡವರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಗ್ಯಾರಂಟಿ ಮೂಲಕ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ಕೊಡಲು ಹೊರಟಿದೆ. ಒಬ್ಬ ಅನುಭವಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎಂಬ ಕಾರಣಕ್ಕೆ ಜನರಿಗೆ ಬೆಲೆ ಏರಿಕೆ ಮಾಡಿದ್ದಾರೆ. ಇದು ಜನ ವಿರೋಧಿ ಸರ್ಕಾರವಲ್ಲವೇ ಎಂದು ಪ್ರಶ್ನಿಸಿದರು.
5
+ ಸರ್ಕಾರ ತೆಗೆದುಕೊಂಡಿರುವುದು, ಅವಿವೇಕದ ನಿರ್ಧಾರ. ಲೋಕಸಭಾ ಚುನಾವಣೆ ಮುಂಚೆ ಕಾಂಗ್ರೆಸ್‌‍ ನಾಯಕರೇ ಹೇಳುತ್ತಿದ್ದರು. ರಾಜ್ಯದಲ್ಲಿ 18-19 ಸಂಸದರು ಗೆಲ್ಲದಿದ್ದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದು ಅವರೇ ಹೇಳುತ್ತಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಮುಖಭಂಗ ಆಯ್ತು. ಅದಕ್ಕಾಗಿ ಗ್ಯಾರಂಟಿ ನಿಲ್ಲಿಸಿದರೆ ಜನ ದಂಗೆ ಏಳುತ್ತಾರೆ ಎಂದು ಸಿಎಂ ಅವರು ಪಿತೂರಿ ಮಾಡಿ ಗ್ಯಾರಂಟಿ ನಿಲ್ಲಿಸುವ ಬದಲು ಪೆಟ್ರೋಲ್‌,ಡೀಸೆಲ್‌ ಬೆಲೆ ಹೆಚ್ಚಳ ಮಾಡುವ ಅನ್ನೋ ತೀರ್ಮಾನ ತಗೊಂಡಿದ್ದಾರೆ.
6
+ ವಿಪಕ್ಷ ನಾಯಕರಾಗಿದ್ದಾಗ ಇದ್ದ ಜನಪರ ಕಾಳಜಿಮುಖ್ಯಮಂತ್ರಿ ಆದೇಲೆ ಎಲ್ಲಿ ಕಳೆದೋಯಿತು? ನಿಮ ಪಕ್ಷದ ಶಾಸಕರಾದ ನಾಡಗೌಡರೇ ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಜನರ ಮುಂದೆ ತಲೆ ಎತ್ತಿಕೊಂಡು ಓಡಾಡೋಕೆ ಆಗುತ್ತಿಲ್ಲ ಎಂದಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಓಡಾಡೋಕೆ ಆಗುತ್ತಿಲ್ಲ. ಬೊಮ್ಮಾಯಿ ಸಿಎಂ ಸ್ಥಾನದಿಂದ ಇಳಿದಾಗ ರೆವಿನ್ಯೂ ಸರ್‌ ಫ್ಲೆಸ್‌‍ ಇತ್ತು. ಒಂದೇ ವರ್ಷದಲ್ಲಿ ರಾಜ್ಯ ದಿವಾಳಿಯ ಅಂಚಿನಲ್ಲಿ ಹೋಗುತ್ತಿದೆ. ಯಾವ ಪುರುಷಾರ್ಥಕ್ಕೆ ಅಧಿಕಾರ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು.
7
+ ಮಾಜಿ ಸಚಿವ ಅಶ್ವಥ್‌ ನಾರಾಯಣ ಮಾತನಾಡಿ, ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ದಿನದಿಂದಲೂ ಬರೀ ಅನ್ಯಾಯ ಮಾಡುತ್ತಿದ್ದಾರೆ. ಎಲ್ಲಾ ದರ ಏರಿಕೆ ಮಾಡುತ್ತಿದ್ದಾರೆ. ಆರ್ಥಿಕ ತಜ್ಞರ ನಾಯಕತ್ವದಲ್ಲಿ ಹಣದುಬ್ಬರದ ಆಗಿದೆ. ನಾವು ಎಷ್ಟು ಪ್ರತಿಭಟನೆ ಮಾಡಿದ್ರು ದಪ್ಪ ಚರ್ಮದವರು ಕ್ಯಾರೆ ಎನ್ನಿತ್ತಿಲ್ಲಅವರು ಅಕ್ಕಪಕ್ಕದ ರಾಜ್ಯಗಳಿಗೆ ಬೆಲೆ ಹೋಲಿಕೆ ಮಾಡ್ತಿದ್ದಾರೆನಾವು ಕೋವಿಡ್‌ ಟೈಮ್‌ ನಲ್ಲಿ 1 ರೂ. ಏರಿಕೆ ಮಾಡಿದಾಗ ಸಿದ್ದರಾಮಯ್ಯನವರು ಎಷ್ಟೆಲ್ಲಾ ಮಾತಾಡಿದ್ದರು. ತಿಳುವಳಿಕೆ ಕೊಟ್ಟ ಮಹಾಪುರುಷರ ಕ್ರಮ ಯಾವ ನ್ಯಾಯ ಎಂದು ಆಕ್ರೋಶ ಹೊರಹಾಕಿದರು.
8
+ ನಮ್ಮ ರಾಜ್ಯದಲ್ಲಿ ಹಣದ ಕೊರತೆ ಇಲ್ಲ ಎಂದವರು, ಏಕೆ ಬೆಲೆ ಏರಿಕೆ ಮಾಡಿದ್ದಾರೆ.ಜನಪರ ಕೆಲಸ ಮಾಡದೆ, ಬರೀ ಲೂಟಿ ಹೊಡಿತಿದ್ದಾರೆಜೈಲಲ್ಲಿ ಇರಬೇಕಾದ ಸರ್ಕಾರ ಇದುಸ್ವಾತಂತ್ರ್ಯ ಬಂದ ಕಾಲದಿಂದಲೂ ನಾವು ಇಷ್ಟು ವೀಕ್‌‍, ಚೀಪ್‌ ಮುಖ್ಯಮಂತ್ರಿ ನಾವು ಕಂಡಿಲ್ಲಮಂತ್ರಿಮಂಡಲದ ಒಬ್ಬ ಸಚಿವರು ಸಿಎಂ ಮಾತು ಕೇಳುತ್ತಿಲ್ಲವಲ್ಲಾ, ಸಚಿವರು ಸಿಎಂ ಆಗೋಕೆ ಹೊತಟಿದ್ದಾರೆ, ಸಿಎಂ ಸಚಿವರ ಎದುರು ಧಮಯ್ಯ ಅಂತಿದ್ದಾರೆ. ಬೆಂಬಲ ಕೊಡಿ ಎಂದು ಭಿಕ್ಷೆ ಬೇಡುತ್ತಿದ್ದಾರೆ. ಇಂತಹ ಅಸಹಾಯಕ ಸಿಎಂ ಸಿದ್ದರಾಮಯ್ಯ ಬೆಲೆ ಏರಿಕೆ ಹಿಂಪಡೆಯುವವರೆಗೆ ನಾವು ಪ್ರತಿಭಟನೆ ನಿಲ್ಲಿಸಲ್ಲ. ಎಲ್ಲಾ ಸಂಘಟನೆಗಳ ಬೆಂಬಲ ಪಡೆದು ಸರ್ಕಾರಕ್ಕೆ ಬುದ್ದಿ ಕಲಿಸುತ್ತೇವೆ ಎಂದು ಗುಡುಗಿದರು.
9
+ ದರ ಹಿಂಪಡೆಯುವವರೆಗೂ ಹೋರಾಟ :ಪೆಟ್ರೋಲ್‌- ಡೀಸೆಲ್‌ಗಳ ಮೇಲೆ ಹೆಚ್ಚಿಸಿರುವ ದರವನ್ನು ವಾಪಾಸ್‌‍ ಪಡೆಯದಿದ್ದರೆ ದರ ಹಿಂಪಡೆಯುವವರೆಗೂ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ.
10
+ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
11
+ ಪೆಟ್ರೋಲ್‌‍-ಡೀಸೆಲ್‌ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ, ಜನಸಾಮಾನ್ಯರು, ಕಾರ್ಮಿಕರು, ಬಡವರು ಹಾಗೂ ಮಧ್ಯಮ ವರ್ಗದವರು ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದಿದ್ದಾರೆ.
12
+ ಈ ಬೆಲೆ ಏರಿಕೆಯ ಬಿಸಿ ಪಂಪ್‌ಸೆಟ್‌, ಟ್ರಾಕ್ಟರ್‌ ಸೇರಿದಂತೆ ಇತರ ಕೃಷಿ ಉಪಕರಣಗಳನ್ನು ಬಳಸುವ ರೈತರ ಕೈ ಸುಡಲಿದೆ. ಅದರ ಜೊತೆಗೆ ವಾಹನವನ್ನು ಆಶ್ರಯಿಸಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೂ ಕೂಡ ಇದರ ಬಿಸಿ ತಟ್ಟಲಿದೆ. ಒಟ್ಟಾರೆಯಾಗಿ ಎಲ್ಲ ಕ್ಷೇತ್ರಗಳಿಗೂ ಬೆಲೆ ಏರಿಕೆಯ ಬಿಸಿತಟ್ಟಿಸುವ ನಿರ್ಧಾರವನ್ನು ಈ ಕೂಡಲೇ ಕೈಬಿಡಬೇಕೆಂದು ಎಂದು ಒತ್ತಾಯಿಸಿದ್ದಾರೆ.
13
+ ರಾಜ್ಯದ ಸಂಪನೂಲವನ್ನು ಬಳಸಿಕೊಳ್ಳುವ ಯಾವ ಕಾಳಜಿಯೂ ಸರ್ಕಾರಕ್ಕಿಲ್ಲ, ಬದಲಾಗಿ ರಾಜ್ಯದ ಸಂಪನೂಲವನ್ನು ಕೊಳ್ಳೆ ಹೊಡೆಯುವವರಿಗೆ ಆಥಿತ್ಯ ನೀಡುವ ತಾಣವನ್ನಾಗಿಸುತ್ತಿದೆ, ಕಾಂಗ್ರೆಸ್‌‍ ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿ ಮಾಡಿಯೇ ಅಧಿಕಾರದಿಂದ ಕೆಳಗಿಳಿಯುವ ಶಪಥ ಮಾಡಿದಂತೆ ಕಾಣುತ್ತಿದೆ ಎಂದು ಗುಡುಗಿದ್ದಾರೆ.
eesanje/url_46_106_11.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ವಿಧಾನಸೌಧವನ್ನೇ ಅಡ ಇಡಲು ಸಿಎಂ “ಸಿದ್ದ” : ಆರ್‌.ಅಶೋಕ್‌ ಆಕ್ರೋಶ
2
+ ಬೆಂಗಳೂರು, ಜೂ.17-ಆದಷ್ಟು ಬೇಗ ಕಾಂಗ್ರೆಸ್‌‍ ಸರ್ಕಾರ ಅಧಿಕಾರದಿಂದ ತೊಲಗದಿದ್ದರೆ ಮುಂದಿನ ಬಜೆಟ್‌ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧವನ್ನೇ ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸ್ಪೋಟಕ ಹೇಳಿಕೆ ನೀಡಿದ್ದಾರೆ.
3
+ ಪಕ್ಷದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾರ್ಪೋರೇಷನ್‌ ಕಟ್ಟಡಗಳು , ವಾರ್ಡ್‌ ಕಚೇರಿ ಅಡ ಇಟ್ಟು ಬ್ಯಾಂಕ್‌ನಿಂದ ಸಾಲ ಪಡೆಯಲು ಇಟ್ಟಿದ್ದಾರೆ. ಇದೇ ಪ್ರವೃತ್ತಿ ಮುಂದುವರೆದರೆ ಸಿಎಂ ಸಿದ್ದರಾಮಯ್ಯನವರು ವಿಧಾನಸೌಧವನ್ನು ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
4
+ ತಮ ಭಾಷಣದ ವೇಳೆ ಅಶೋಕ್‌ ಅವರು ಈ ಹಿಂದೆ ಸಿದ್ದರಾಮಯ್ಯನವರು ವಿಪಕ್ಷ ನಾಯಕನಾಗಿದ್ದ ವೇಳೆ ಬೆಲೆ ಏರಿಕೆ ಬಗ್ಗೆ ಮಾತನಾಡಿದ ಭಾಷಣದ ವಿಡಿಯೋವನ್ನು ಪ್ರದರ್ಶಿಸಿದರು.
5
+ ನಾವು ಅಂದು ಆಡಳಿತದಲ್ಲಿದ್ದಾಗ ಒಂದು ರೂ. ಬೆಲೆ ಹೆಚ್ಚಳ ಮಾಡಿದ್ದಕ್ಕೆ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದ್ದರು. ಈಗ ಪೆಟ್ರೋಲ್‌ ದರವನ್ನು 3 ರೂ. 50 ಪೈಸೆ ಹಾಗೂ ಡೀಸೆಲ್‌ ದರವನ್ನು 3 ರೂ.ಗೆ ಏರಿಕೆ ಮಾಡಿದ್ದಾರೆ. ಹಾಗಾದರೆ ನಿಮ ಸರ್ಕಾರಕ್ಕೆ ಮಾನಮರ್ಯಾದೆ ಇದೆಯೇ ಎಂದು ತರಾಟೆಗೆ ತೆಗೆದುಕೊಂಡರು.
6
+ ವಾಲೀಕಿ ಅಭಿವೃದ್ಧಿ ನಿಗಮದ ಹಣ ನುಂಗಿದ ಆರೋಪದಲ್ಲಿ ಸಚಿವ ನಾಗೇಂದ್ರ ಅವರ ಮೊದಲ ವಿಕೆಟ್‌ ಬಿದ್ದಿದೆ. ಈಗ 2ನೇ ವಿಕೆಟ್‌ ಬೀಳುವುದೇ ಸಿದ್ದರಾಮಯ್ಯನವರದು. ನಾಗೇಂದ್ರ 20% ಹೊಡೆದರೆ ಸಿದ್ದರಾಮಯ್ಯ 80% ಪಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದರು. 187 ಕೋಟಿ ಹಣವನ್ನು ಹಗಲು ದರೋಡೆ ಮಾಡಿದ್ದಾರೆ. ದಲಿತರ ಹಣ ಬಾರ್‌ಗಳಿಗೆ ಹೋಗಿದೆ. ಎಲ್ಲೆಂದರಲ್ಲಿ ಹಾಡುಹಗಲೇ ಹಿಂದೂಗಳ ಕಗ್ಗೊಲೆಯಾಗುತ್ತದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
7
+ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾದರೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಇಂತಹ ನುಡಿಮುತ್ತನ್ನು ಹಿಂದೆ ಸಿದ್ದರಾಮಯ್ಯನವರೇ ಹೇಳಿದ್ದರು. ಈಗ ಏಕಾಏಕಿ ಟಾಕಾಟಕ್‌ ಎಂದು ಬೆಲೆ ಹೆಚ್ಚಳ ಮಾಡಿದ್ದಾರೆಂದು ಕಿಡಿಕಾರಿದರು.
8
+ ಮದ್ಯದ ಬೆಲೆ 3 ಸಾವಿರ, ಪೆಟ್ರೋಲ್‌ ಬೆಲೆ 1800, ಅಗತ್ಯ ವಸ್ತುಗಳ ಬೆಲೆ, ವಿದ್ಯುತ್‌ ದರವು ಹೆಚ್ಚಳವಾಗಿದೆ, ಸದ್ಯದಲ್ಲೇ ಬಸ್‌‍ ದರವೂ ಏರಿಕೆಯಾಗಲಿದೆ. ಕಾಫೀ, ಟೀ ದರವೂ ಹೆಚ್ಚಳವಾಗಿದೆ. ಕಾಂಗ್ರೆಸ್‌‍ನವರು ಸತ್ತರೆ ತಿಥಿ ವಡೆಯು ಹೇರಿಕೆಯಾಗಲಿದೆ ಎಂದು ವ್ಯಂಗ್ಯವಾಡಿದರು.
9
+ ಮಹಾನಗರ ಪಾಲಿಕೆಗಳಲ್ಲಿ ಕಸ ಗುಡಿಸಲು ಪೌರಕಾರ್ಮಿಕರಿಗೆ ಸಂಬಳ ಕೊಟ್ಟಿಲ್ಲ. ಒಂದೇ ಒಂದು ಗುಂಡಿಯನ್ನೂ ಸಹ ಮುಚ್ಚಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬ್ರಾಂಡ್‌ ಬೆಂಗಳೂರು ಮಾಡಲು ಹೊರಟಿದ್ದಾರೆ. ಇದೇನಪ್ಪಾ ಶಿವಕುಮಾರ್‌ ಬ್ರಾಂಡ್‌ ಬೆಂಗಳೂರು ಎಂದು ಅಶೋಕ್‌ ಪ್ರಶ್ನಿಸಿದರು.
10
+ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ.ರವಿ ಮಾತನಾಡಿ, ರಾಜ್ಯದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿ ಬಕ್ರೀದ್‌ ಹಿಂದಿನ ದಿನ ಜನರನ್ನು ಬಕ್ರಾ ಮಾಡಲು ಬೆಲೆ ಏರಿಕೆ ಮಾಡಲಾಗಿದೆ. ಊಸರವಳ್ಳಿಗೂ ನಿಮಗೂ ಸರ್ಧೆ ಮಾಡಿದರೆ ಗೆಲ್ಲೋದು ನೀವೆ ಎಂದು ವಾಗ್ದಾಳಿ ನಡೆಸಿದ್ದಾರೆ.
11
+ ಸಂಗ್ರಹ ಮಾಡಿದ ಹಣವೆಲ್ಲಾ ರಾಹುಲ್‌ ಗಾಂಧಿಗೆ ಹೋಗುತ್ತಿದೆಕಾಂಗ್ರೆಸ್‌‍ ಸರ್ಕಾರವಿರುವ 3 ಕಡೆಯೂ ಜನರಿಗೆ ನಾಮ ಹಾಕ್ತಾರೆ. ಬಕ್ರೀದ್‌ ದಿನ ಸಿಎಂ ಮಾತ್ರ ಟೋಪಿ ಹಾಕಿಕೊಳ್ಳುತ್ತಾರೆ ಎಂದುಕೊಂಡಿದ್ದೆವು. ಆದರೆ ಇವರು ಎಲ್ಲರಿಗೂ ಟೋಪಿ ಹಾಕಿದ್ದಾರೆ. ಚೊಂಬು ಆದರೂ ಯಾವುದಕ್ಕಾದರೂ ಉಪಯೋಗಕ್ಕೆ ಬರುತ್ತದೆ. ಆದರೆ ಕಾಂಗ್ರೆಸ್‌‍ ನಾಯಕರು ಕೊಡುವುದು ಹಳೆಯ ಚಿಪ್ಪು. ಚಿಪ್ಪು ಕೂಡ ಮೂರು ತೂತು, ಇವರ ಸರ್ಕಾರವೂ ತೂತು. ಸಂಗ್ರಹ ಮಾಡಿದ ಹಣವೆಲ್ಲಾ ರಾಹುಲ್‌ ಗಾಂಧಿಗೆ ಹೋಗುತ್ತಿದೆ. ಬೆಲೆ ಇಳಿಸಬೇಕು ಇಲ್ಲಾ ಅವರೇ ಇಳಿಯಬೇಕು. ಇಳಿಯದಿದ್ದರೆ ಹೇಗೆ ಇಳಿಸಬೇಕೆಂದು ನಮಗೆ ಗೊತ್ತಿದೆ. ನುಂಗಣ್ಣ, ನುಂಗಣ್ಣ ಎಂದು ನುಂಗುವ ಕೆಲಸ ಒಂದೇ ಮಾಡುತ್ತಿದ್ದಾರೆ ಎಂದು ಸಿ.ಟಿ.ರವಿ ಕಿಡಿಕಾರಿದರು.
eesanje/url_46_106_12.txt ADDED
@@ -0,0 +1,4 @@
 
 
 
 
 
1
+ ವಿಧಾನಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಹೃದಯಾಘಾತದಿಂದ ನಿಧನ
2
+ ಬೆಂಗಳೂರು, ಜೂ.17-ವಿಧಾನಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಪಕ್ಷದ ವತಿಯಿಂದ ಹಮಿಕೊಳ್ಳಲಾಗಿದ್ದ ಪ್ರತಿಭಟನೆಯ ವೇಳೆ ಅಣುಕು ಶವ ನಡೆಸುತ್ತಿದ್ದ ವೇಳೆ ತೀವ್ರ ಹೃದಯಾಘಾತವಾಗಿ ಅವರು ಕೊನೆಯುಸಿರೆಳೆದಿದ್ದಾರೆ.
3
+ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರು ಕುಸಿದುಬಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.ಆರ್‌ಎಸ್‌‍ಎಸ್‌‍ ಹಿನ್ನಲೆಯಲ್ಲಿ ಭಾನುಪ್ರಕಾಶ್‌ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಸಾಕಷ್ಟು ಶ್ರಮ ಹಾಕಿದ್ದರು. ಒಂದು ಬಾರಿ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
4
+ ಸಂತಾಪ: ಭಾನುಪ್ರಕಾಶ್‌ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಸೇರಿದಂತೆ ಅನೇಕರು ತೀವ್ರ ಕಂಬನಿ ಮಿಡಿದಿದ್ದಾರೆ.
eesanje/url_46_106_2.txt ADDED
@@ -0,0 +1,6 @@
 
 
 
 
 
 
 
1
+ ರಸ್ತೆ ಅಪಘಾತದಲ್ಲಿ ಗಾಯಗೊಂಡ ದಂಪತಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ ಸಂಸದ ಡಾ.ಸಿ.ಎನ್‌.ಮಂಜುನಾಥ್‌
2
+ ಕನಕಪುರ,ಜೂ.18-ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ದಂಪತಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರು ಪ್ರಥಮ ಚಿಕಿತ್ಸೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಅಲ್ಲೂ ಕೂಡ ಮಾನವೀಯತೆ ಮೆರೆದಿದ್ದಾರೆ.
3
+ ಮೈಸೂರು ರಸ್ತೆಯಲ್ಲಿ ಬರುತ್ತಿರುವ ಮಾರ್ಗಮಧ್ಯೆ ಅಪಘಾತವಾಗಿ ನರಳುತಿದ್ದ ದಂಪತಿಗಳನ್ನು ಗಮನಿಸಿ ತಮ ವಾಹನ ನಿಲ್ಲಿಸಿ ಸ್ಥಳಕ್ಕೆ ತೆರಳಿ ಗಾಯಾಳು ದಂಪತಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
4
+ ಆನೆಕಲ್‌ ತಾಲೂಕು ದಂಪತಿ ಮುನಿವೀರಪ್ಪ ಮತ್ತು ಮುನಿರತ್ನಮ ಸಾತನೂರು ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಹೆದ್ದಾರಿ ಬಳಿಯ ಬಟ್ಟಲುಗುಂಡಪ್ಪ ಬೆಟ್ಟದ ಸಮೀಪ ಟಿಟಿ ವಾಹನ ಅಪಘಾತ ಮಾಡಿ ಹೋಗಿತ್ತು.
5
+ ಅದೇ ವೇಳೆಗೆ ಪ್ರಸಿದ್ಧ ಗ್ರಾಮದೇವತೆ ಕಬ್ಬಾಳಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಸಂಜೆ ವಾಪಸ್‌‍ ತೆರಳುವಾಗ ಅಪಘಾತದಲ್ಲಿ ಬಿದ್ದು ನರಳುತಿದ್ದವರನ್ನು ನೋಡಿದ ಸಂಸದ ಸಿ ಎನ್‌ ಮಂಜುನಾಥ್‌ ಕೂಡಲೇ ಅವರನ್ನು ಪರೀಕ್ಷಿಸಿ ಆಟೋ ಮೂಲಕ ನಗರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
6
+ ತಕ್ಷಣ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ .ನರಸಿಂಹಮೂರ್ತಿಯವರನ್ನುೆ ದೂರವಾಣಿ ಮೂಲಕ ಸಂರ್ಪಕಿಸಿ ಆಟೋರಿಕ್ಷಾದಲ್ಲಿ ಕಳುಹಿಸುತ್ತಿರುವುದಾಗಿ ಹೇಳಿ ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.ಸಂಸದರ ಈ ಸಹಾದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ವ್ಯಾಪಕ ಶ್ಲಾಘನೆಗಳು ಕೇಳಿಬರುತ್ತಿವೆ.
eesanje/url_46_106_3.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮುಂದುವರೆಯುತ್ತಾ ಬಿಜೆಪಿ-ಜೆಡಿಎಸ್‌‍ ದೋಸ್ತಿ..?
2
+ ಬೆಂಗಳೂರು, ಜೂ.17– ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ನ ಎಲ್ಲಾ ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಹೆಚ್ಚಿನ ಸ್ಥಾನ ಗಳಿಸಿರುವ ಬಿಜೆಪಿ-ಜೆಡಿಎಸ್‌‍ ಎನ್‌ಡಿಎ ಮೈತ್ರಿಕೂಟ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಂದುವರೆಸಲು ಉತ್ಸುಕತೆ ತೋರಿದೆ.
3
+ ಕಾಂಗ್ರೆಸ್‌‍ನ ನಾಗಲೋಟಕ್ಕೆ ಕಡಿವಾಣ ಹಾಕಬೇಕಾದರೆ ಎನ್‌ಡಿಎ ಮೈತ್ರಿಕೂಟದಿಂದ ಮಾತ್ರ ಸಾಧ್ಯ ಎಂಬುದನ್ನು ಮನಗೊಂಡಿರುವ ಉಭಯ ಪಕ್ಷಗಳ ಮುಖಂಡರು, ಜಿಲ್ಲಾ , ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಮೈತ್ರಿಗೆ ಒಲವು ತೋರಿದ್ದಾರೆ.
4
+ ಸದ್ಯದಲ್ಲೇ ಜರುಗಬಹುದಾದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಜೆಡಿಎಸ್‌‍-ಬಿಜೆಪಿ ಎನ್‌ಡಿಎ ಮೈತ್ರಿಕೂಟ ಒಮತದ ಕಣಕ್ಕಿಳಿಸುವ ಸಾಧ್ಯತೆ ಇದೆ.
5
+ ಜೆಡಿಎಸ್‌‍-ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಮತ ವಿಭಜನೆಯಾಗಿ ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ ಎಂಬಂತೆ ಕಾಂಗ್ರೆಸ್‌‍ ಪರಿಸ್ಥಿತಿಯ ಲಾಭ ಪಡೆಯಬಹುದೆಂಬುದು ಅರಿವಾಗಿರುವುದರಿಂದ ಮೈತ್ರಿಯನ್ನು ಇನ್ನಷ್ಟು ಗಟ್ಟಿಗೊಳಿಸಲು ಕಾರ್ಯತಂತ್ರ ರೂಪಿಸಲಾಗಿದೆ.
6
+ ಸ್ಥಳೀಯ ಮಟ್ಟದಲ್ಲಿ ಏನೇ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಮೊದಲ ಹಂತದ ನಾಯಕರು ಸರಿಪಡಿಸಿಕೊಂಡು ಭವಿಷ್ಯದಲ್ಲಿ ಕಾಂಗ್ರೆಸ್‌‍ ಎಲ್ಲಿಯೂ ಅಧಿಕಾರಕ್ಕೆ ಬಾರದಂತೆ ತಡೆಯಲು ಮೈತ್ರಿ ಅನಿವಾರ್ಯ ಎಂಬ ಸಂದೇಶ ಕೇಂದ್ರ ನಾಯಕರಿಂದಲೇ ಬಂದಿದೆ.
7
+ ಅದರಲ್ಲೂ ವಿಶೇಷವಾಗಿ ಹಳೇ ಮೈಸೂರು ಭಾಗದ ಬಿಜೆಪಿ ಸಂಸದರು ಮುಂಬರುವ ಬಿಬಿಎಂಪಿ ಮತ್ತು ಜಿಲ್ಲಾ ಪಂಚಾಯಿತಿ/ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಸಲು ಉತ್ಸುಕರಾಗಿದ್ದಾರೆ.
8
+ ಅರೆ-ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜೆಡಿಎಸ್‌‍ ಮತಗಳನ್ನು ತಮ್ಮ ಪರವಾಗಿ ಪರಿವರ್ತಿಸುವುದರೊಂದಿಗೆ ಮೈತ್ರಿಯು ಲೋಕಸಭಾ ಚುನಾವಣಾ ಫಲಿತಾಂಶಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದ್ದು, ಬಿಜೆಪಿ ಸಂಸದರು ಪ್ರಭಾವಿತರಾಗಿದ್ದಾರೆ. ಬಿಬಿಎಂಪಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಉಭಯ ಪಕ್ಷಗಳಿಗೆ ಅನುಕೂಲವಾಗುತ್ತದೆ ಎಂಬುದು ಬಹುತೇಕ ಅಭಿಪ್ರಾಯವಾಗಿದೆ.
9
+ ಉದಾಹರಣೆಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌‍ ಪಕ್ಷದ ಕಾರ್ಯಕರ್ತರು ಬೆಂಬಲ ಸೂಚಿಸಿದ್ದರಿಂದ ಅವರು ಗೆಲುವು ಸಾಧಿಸಿದ್ದು, ಉಭಯ ಪಕ್ಷಗಳ ನಾಯಕರು ಅವರಿಗೆ ಅಭಿನಂದನೆ ಸಲ್ಲಿಸಿದರು. ಭವಿಷ್ಯದಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಬಹುದು ಎಂದು ಹೆಸರು ಹೇಳಲು ಇಚ್ಛಿಸದ ಪ್ರಮುಖರೊಬ್ಬರು ತಿಳಿಸಿದ್ದಾರೆ.
10
+ ವೀರಶೈವ ಲಿಂಗಾಯತ ಸಮುದಾಯದವರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಹಾಗೂ ಜಲಶಕ್ತಿ ಸಚಿ��� ವಿ ಸೋಮಣ್ಣ ಅವರು ಜೆಡಿಎಸ್‌‍ ವರಿಷ್ಠ ಎಚ್‌ಡಿ ದೇವೇಗೌಡ ಮತ್ತು ಕೇಂದ್ರದ ಭಾರೋ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ಮುಂಬರುವ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಸಲು ಉತ್ಸುಕರಾಗಿದ್ದಾರೆ.
11
+ ಹಳೇ ಮೈಸೂರು ಭಾಗದ ಹಲವು ಲೋಕಸಭಾ ಕ್ಷೇತ್ರಗಳಲ್ಲಿ ವಿ.ಸೋಮಣ್ಣ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ವಿಚಾರದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಮಾತು ಮುಖ್ಯವಾಗಿತ್ತು. ಹೀಗಾಗಿ, ಬಿಬಿಎಂಪಿ ಮತ್ತು ಜಿಲ್ಲಾ/ತಾಲ್ಲೂಕು ಪಂಚಾಯಿತಿ ಚುನಾವಣೆ ಸೇರಿದಂತೆ ಮುಂದಿನ ಚುನಾವಣೆಗಳಲ್ಲಿ ಈ ಪ್ರದೇಶದಲ್ಲಿ ಜೆಡಿಎಸ್‌‍ ಜೊತೆಗೆ ಮೈತ್ರಿ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.
12
+ ಮೈತ್ರಿ ಮುಂದುವರಿಸಲು ಸಂಸದರು ಒಪ್ಪಿಗೆ ಸೂಚಿಸಿದ್ದರೂ, ಜೆಡಿಎಸ್‌‍ ಜೊತೆಗೆ ಮೈತ್ರಿ ಮುಂದುವರಿಸಿದ್ದೇ ಆದರೆ ಭವಿಷ್ಯದಲ್ಲಿ ಪಕ್ಷದ ಮುಂದಿನ ಯೋಜನೆಗಳಲ್ಲಿ ತಮ ಪ್ರಭಾವ ಕುಗ್ಗುತ್ತದೆ ಎಂದು ಕೆಲವು ನಾಯಕರು ಅಭಿಪ್ರಾಯಪಟ್ಟಿದ್ದಾರೆ.
13
+ ಮೈತ್ರಿಯ ಬಲದಿಂದ ರಾಜ್ಯದಲ್ಲಿ ಯಶಸ್ವಿಯಾದ ನಂತರ ಬಿಜೆಪಿ ರಾಷ್ಟ್ರೀಯ ನಾಯಕರು ಮತ್ತು ಸಂಸದರು ಜೆಡಿಎಸ್‌‍ನ ರಾಜ್ಯ ನಾಯಕತ್ವದ ಜೊತೆಗೆ ಉತ್ತಮವಾದ ಸಂಬಂಧ ಹೊಂದುತ್ತಲೇ ಇರುವುದರಿಂದ ಬಿಜೆಪಿಯೊಳಗಿನ ಇತರ ನಾಯಕರಿಗೆ ಅವಕಾಶಗಳು ಕಡಿಮೆಯಾಗುತ್ತವೆ.
14
+ ಇದರಿಂದ ಬಿಜೆಪಿಯೊಳಗಿನ ಒಕ್ಕಲಿಗ ನಾಯಕರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್‌‍ ಯಡಿಯೂರಪ್ಪ ಸೇರಿದ್ದಾರೆ. ಒಕ್ಕಲಿಗ ಸಮುದಾಯ ಮತ್ತು ಜೆಡಿಎಸ್‌‍ (ಜನತಾ ದಳ (ಜಾತ್ಯತೀತ) ಎರಡಕ್ಕೂ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ಇದು ವಿಶೇಷವಾಗಿ ನಿಜವಾಗಿದೆ. ಈ ಪ್ರದೇಶದಲ್ಲಿ, ಮೈತ್ರಿಯು ಬಿಜೆಪಿ ನಾಯಕರ ಪ್ರಭಾವ ಮತ್ತು ಅವಕಾಶಗಳನ್ನು ಸೀಮಿತಗೊಳಿಸಬಹುದು ಎಂಬ ಆತಂಕವೂ ಇದೆ.
eesanje/url_46_106_4.txt ADDED
@@ -0,0 +1,8 @@
 
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯನವರಿಗೆ ಬಿ.ವೈ.ವಿಜಯೇಂದ್ರ ಬಹಿರಂಗ ಸವಾಲ್
2
+ ಬೆಂಗಳೂರು, ಜೂ.17-ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆ ಪ್ರಮಾಣವನ್ನು ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ ಸಮರ್ಥಿಸಿಕೊಳ್ಳುವ ಬದಲು ನಮ ರಾಜ್ಯದಿಂದಲೇ ಮೊದಲು ಕಡಿಮೆ ಮಾಡಿ ನಂತರ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಸವಾಲು ಹಾಕಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡೀಸೆಲ್‌ ಮತ್ತು ಪೆಟ್ರೋಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದರು.
4
+ ಮುಖ್ಯಮಂತ್ರಿಯವರು ಕೇಂದ್ರ ಸರ್ಕಾರದ ಮೇಲೆ ಯಾವಾಗಲೂ ಗೂಬೆ ಕೂರಿಸಿ ತಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಾರೆ. ಬೇರೆ ರಾಜ್ಯಗಳ ಉದಾಹರಣೆ ಕೊಡುವುದು ನಮಗೆ ಬೇಡ. ಮೊದಲು ಕರ್ನಾಟಕದಿಂದಲೇ ಕಡಿಮೆ ಮಾಡಿ ಬಳಿಕ ಇನ್ನೊಂದು ರಾಜ್ಯದ ಉದಾಹರಣೆ ಕೊಡಿ ಎಂದು ಆಗ್ರಹಿಸಿದರು.
5
+ ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡದೆ ಬೆಲೆ ಏರಿಕೆ ಹೆಚ್ಚಳ ಜನರಿಗೆ ಬರದ ಗ್ಯಾರಂಟಿ ಕೊಡುತ್ತಿದೆ. ಇದೊಂದು ಜನ ವಿರೋಧಿ ಸರ್ಕಾರ. ಬಡವರ ಮೇಲಿನ ತೆರಿಗೆ ಬರೆ ಎಂದು ಕಿಡಿಕಾರಿದರು.
6
+ ಕಾಂಗ್ರೆಸ್‌‍ ಪಕ್ಷದ ನಾಡಗೌಡರೇ ಸರ್ಕಾರದ ಬಳಿ ಹಣವಿಲ್ಲವೆಂದು ಹೇಳಿದ್ದಾರೆ. ನನ್ನ ಕ್ಷೇತ್ರಕ್ಕೆ ಅನುದಾನ ಕೊಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಬೆದರಿಕೆ ಹಾಕಿದ್ದಾರೆ.ಒಂದು ಕಡೆ ಭ್ರಷ್ಟಾಚಾರ ಮತ್ತೊಂದು ಸಿಎಂ ಸಿದ್ದರಾಮಯ್ಯನವರು ಆಡಳಿತ ನಡೆಸುವಲ್ಲಿ ವಿಫಲರಾಗಿದ್ದಾರೆ. ಸರ್ಕಾರದ ವಿರೋಧಿ ಧೋರಣೆಯನ್ನು ವಿರೋಧಿಸಿ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
7
+ ಬಿಜೆಪಿ ಅಧಿಕಾರದಲ್ಲಿದ್ದಿದ್ದರೆ ನಾವು 10 ರೂ. ದರವನ್ನು ಕಡಿಮೆ ಮಾಡುತ್ತಿದ್ದೆವು. ಸಿದ್ದರಾಮಯ್ಯನವರು ಹಿಂದೆ ತಾವೇ ಹೇಳಿದ ಮಾತನ್ನು ಮರೆತು ಬಿಟ್ಟಿದ್ದಾರ.ಪೆಟ್ರೋಲ್‌ ಡೀಸೆಲ್‌ ದರ ಹೆಚ್ಚಳದಿಂದಾಗಿ ಆಟೋ, ಟ್ಯಾಕ್ಸಿ ದರವು ಹೆಚ್ಚಳವಾಗುತ್ತದೆ. ನಮ ಹೋರಾಟಕ್ಕೆ ಜೆಡಿಎಸ್‌‍ ಕೂಡ ಬೆಂಬಲ ಕೊಡಲಿದೆ ಎಂದು ಹೇಳಿದರು.
8
+ ಯಡಿಯೂರಪ್ಪ ವಿರುದ್ಧ ಕೇಳಿಬಂದಿರುವ ಆರೋಪ ಕುರಿತಂತೆ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಯಾವುದೇ ಕಾರಣಕ್ಕೂ ಹೆದರಿಕೊಂಡು ಹೋಗುವ ಪ್ರಶ್ನೆಯೇ ಇಲ್ಲ. ನ್ಯಾಯಾಲಯದಲ್ಲಿ ನಡೆದ ವಾದ-ಪ್ರತಿವಾದದ ಸಂದರ್ಭದಲ್ಲಿ ನ್ಯಾಯಾಧೀಶರೇ ಯಡಿಯೂರಪ್ಪ ಕಾನೂನಿಗೆ ಬೆನ್ನು ತೋರಿಸುವ ವ್ಯಕ್ತಿಯಲ್ಲ ಎಂದು ಹೇಳಿದ್ದಾರೆ. ನ್ಯಾಯಾಂಗದ ಮೇಲೆ ನಮಗೆ ವಿಶ್ವಾಸವಿದೆ ಎಂದು ಹೇಳಿದರು.
eesanje/url_46_106_5.txt ADDED
@@ -0,0 +1,7 @@
 
 
 
 
 
 
 
 
1
+ ಇಂಧನ ಬೆಲೆ ಏರಿಕೆ ಸಮರ್ಥಿಸಿಕೊಳ್ಳುವ ನಾಚಿಕೆಗೇಡಿನ ಸರ್ಕಾರ : ಬೊಮ್ಮಾಯಿ
2
+ ಬೆಂಗಳೂರು, ಜೂ.17-ಇಂಧನ ಬೆಲೆ ಏರಿಕೆ ವಿಷಯದಲ್ಲಿ ಸುಳ್ಳಿನ ಸರಮಾಲೆ/ತಪ್ಪು ಮಾಹಿತಿಯನ್ನು ಬಿತ್ತರಿಸುವುದು ಕಾಂಗ್ರೆಸ್‌‍ ಪಕ್ಷದ ಕಪಟ ನಾಟಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
3
+ ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಜನರಿಗೆ ಗ್ಯಾರಂಟಿ ನೀಡಲು ಈ ರೀತಿಯಾದ ದರ ಏರಿಕೆ ಅನಿವಾರ್ಯ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
4
+ ಮುಂದುವರೆದು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್‌‍/ಡೀಸೆಲ್‌ ದರ ಕಡಿಮೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಅಂಡಮಾನ್‌ ದ್ವೀಪದಲ್ಲಿ ಪೆಟ್ರೋಲ್‌ ದರ ಅತ್ಯಂತ ಕಡಿಮೆ ಇದೆ ಹಾಗೂ ಆಂಧ್ರ ಮತ್ತು ತೆಲಂಗಾಣದಲ್ಲಿ ಅತ್ಯಂತ ಹೆಚ್ಚಾಗಿದೆ.
5
+ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲೆ ಕೇಂದ್ರ ಸರ್ಕಾರ ವಿಧಿಸುವ ಅಬಕಾರಿ ಸುಂಕ ರೂ.19.90 (ಪ್ರತಿ ಲೀಟರ್‌ ಮೇಲೆ) ಆಗಿದೆ, ಅದೇ ಕಾಂಗ್ರೆಸ್‌‍ ಸರ್ಕಾರದ 24.17 (ಪ್ರತಿ ಲೀಟರ್‌) ಆಗಿದೆ. ಪೆಟ್ರೋಲ್‌ ಮೇಲೆ ರಾಜ್ಯ ಸರ್ಕಾರ ಹಾಕುವ ಕೇಂದ್ರ ಸರ್ಕಾರದ ಎಕ್ಸೈಸ್‌‍ ಡ್ಯೂಟಿಗಿಂತ ಹೆಚ್ಚಾಗಿದೆ.
6
+ ಇಂದು ತಮ್ಮ ಬಿಟ್ಟಿ ಭಾಗ್ಯಗಳಿಗೆ ಹಣವನ್ನು ಹೊಂದಿಸಲು ಪೆಟ್ರೋಲ್‌ ಮೇಲಿನ ಹೆಚ್ಚಳ ಮಾಡಿರುವ ಕಾಂಗ್ರೆಸ್‌‍ ಸರ್ಕಾರ 2022ರಲ್ಲಿ ಹಾಗೂ 2000 ಇಸವಿಯಲ್ಲಿ ಏರುತ್ತಿರುವ ಇಂಧನ ದರಗಳ ಮೇಲೆ ಸ್ಪೀಕ್‌ ಅಪ್‌ ಇಂಡಿಯಾ ಎಂಬ ಬೃಹತ್‌ ಚಳುವಳಿಯನ್ನು ಕೇಂದ್ರ ಸರ್ಕಾರದ ವಿರುದ್ಧ ಹಮಿಕೊಂಡಿತ್ತು.
7
+ ಅಸಲೀಗೆ 2000 ಹಾಗೂ 2022ರಲ್ಲಿ ಕೋವಿಡ್‌ ಸೇರಿದಂತೆ, ರಶಿಯಾ-ಯುಕ್ರೇನ್‌ ಬಿಕ್ಕಟಿನಿಂದ ಇಂಧನ ಮೇಲಿನ ಆಮದು ಬೆಲೆ ಹೆಚ್ಚಾಗಿದ್ದರಿಂದ ಕೇಂದ್ರ ಸರ್ಕಾರ ಅನಿವಾರ್ಯವಾಗಿ ಇಂಧನ ಬೆಲೆ ಹೆಚ್ಚಿಸಬೇಕಾಗಿತ್ತು ಹೊರತು ಬಡವರಿಗೆ, ಮಾಧ್ಯಮ ವರ್ಗದವರಿಗೆ ಅನಾವಶ್ಯಕವಾಗಿ ಹೊರೆ ಹಾಕಲು ಅಲ್ಲ. ಹೊಣೆಗೇಡಿತನಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್‌‍ ಎಂದು ಅವರು ಕಿಡಿಕಾರಿದ್ದಾರೆ.
eesanje/url_46_106_6.txt ADDED
@@ -0,0 +1,7 @@
 
 
 
 
 
 
 
 
1
+ ಮರ್ಮಾಂಗಕ್ಕೆ ಎಲೆಕ್ಟ್ರಿಕ್ ಶಾಕ್‌ : ‘ಅಂತ’ ಸಿನಿಮಾ ಸ್ಟೈಲಲ್ಲೇ ರೇಣುಕಾಸ್ವಾಮಿಗೆ ‘ಡಿ’ಗ್ಯಾಂಗ್ ಟಾರ್ಚರ್.?
2
+ ಬೆಂಗಳೂರು,ಜೂ.17-ರೇಬಲ್‌ ಸ್ಟಾರ್‌ ಅಂಬರೀಷ್‌ ಅಭಿನಯದ ಅತ್ಯಮೋಘ ಚಿತ್ರ ಅಂತ ಚಿತ್ರದಲ್ಲಿ ಹೀರೋ ಸುಶೀಲ್‌ಕುಮಾರ್‌ ಅವರನ್ನು ಚೇರ್‌ಗೆ ಕಟ್ಟಿ ಹಾಕಿ ನೀಡುವ ಚಿತ್ರಹಿಂಸೆ ನೀಡಿದ ಮಾದರಿಯಲ್ಲೇ ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ಕೊಲೆಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿಗೂ ಚಿತ್ರಹಿಂಸೆ ನೀಡಲಾಗಿತ್ತೇ ಎಂಬ ಅನುಮಾನ ಇದೀಗ ಪೊಲೀಸರನ್ನು ಕಾಡತೊಡಗಿದೆ.
3
+ ಕಾರಣ ಇಷ್ಟೇ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದ ಪಟ್ಟಣಗೆರೆಯಲ್ಲಿರುವ ಶೆಡ್‌ ಹಿಂದಿನಿಂದಲೂ ಚಿತ್ರಹಿಂಸೆ ನೀಡುವುದಕ್ಕೆ ಕುಖ್ಯಾತಿ ಹೊಂದಿದೆ. ಇಲ್ಲಿ ಪೈನಾನ್ಷಿಯರ್‌ಗಳಿಂದ ಹಣ ಪಡೆದು ಸಾಲ ಮರು ಪಾವತಿಸದೆ ತಲೆಮರೆಸಿಕೊಳ್ಳುವವರನ್ನು ಕರೆತಂದು ಅಂತ ಚಿತ್ರದ ಮಾದರಿಯಲ್ಲೇ ಚಿತ್ರಹಿಂಸೆ ನೀಡಿದ ಉದಾಹರಣೆಗಳಿವೆ ಎಂದು ಪೊಲೀಸ್‌‍ ಮೂಲಗಳು ತಿಳಿಸಿವೆ.
4
+ ಅಂತ ಚಿತ್ರದಲ್ಲಿ ಹೀರೋ ಸುಶೀಲ್‌ ಕುಮಾರ್‌ ಅವರನ್ನು ಚೇರ್‌ಗೆ ಕಟ್ಟಿ ಹಾಕಿ ಮರ್ಮಾಂಗಕ್ಕೆ ಎಲೆಕ್ಟ್ರಿಕ್ ಶಾಕ್‌ ನೀಡಿ ಬೆರಳುಗಳಿಂದ ಉಗುರುಗಳನ್ನು ಕಿತ್ತು ಚಿತ್ರಹಿಂಸೆ ನೀಡಲಾಗುತ್ತದೆ. ಈ ಚಿತ್ರಹಿಂಸೆಯ ನಂತರ ಹೀರೋ ಸುಶೀಲ್‌ಕುಮಾರ್‌ ಪುರುಷತ್ವ ಕಳೆದುಕೊಳ್ಳಬೇಕಾಗುತ್ತದೆ.
5
+ ಅಂತ ಚಿತ್ರದ ಮಾದರಿಯಲ್ಲೇ ಸಾಲ ಕಟ್ಟಲು ಸತಾಯಿಸುವವರನ್ನು ಪಟ್ಟಣಗೆರೆ ಶೆಡ್‌ಗೆ ಕರೆತಂದು ಚಿತ್ರಹಿಂಸೆ ನೀಡಿರುವ ಕುರುಹುಗಳು ಅಲ್ಲಿ ಪತ್ತೆಯಾಗಿದೆ ಎನ್ನುತ್ತಿವೆ ಪೊಲೀಸ್‌‍ ಮೂಲಗಳು.
6
+ ಪವಿತ್ರಾಗೌಡ ಅವರಿಗೆ ಆಶ್ಲೀಲ ಫೋಟೋ ಕಳುಹಿಸಿದ್ದ ರೇಣುಕಾಸ್ವಾಮಿಯನ್ನು ಅಂತ ಚಿತ್ರದ ರೀತಿಯಲ್ಲಿ ಚಿತ್ರಹಿಂಸೆ ನೀಡುವ ಉದ್ದೇಶದಿಂದಲೇ ಆತನನ್ನು ಇಲ್ಲಿಗೆ ಕರೆತಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರ ಈ ಅನುಮಾನಕ್ಕೆ ಇಂಬು ನೀಡುವಂತೆ ಮನುಷ್ಯರಿಗೆ ಶಾಕ್‌ ನೀಡಲು ಬಳಸುವ ಮೆಗ್ನರ್‌ ಯಂತ್ರ ಪೊಲೀಸರಿಗೆ ಸಿಕ್ಕಿದೆ.
7
+ ಹೀಗಾಗಿ ರೇಣುಕಾಸ್ವಾಮಿಗೆ ಅಂತ ಚಿತ್ರದ ಮಾದರಿಯಲ್ಲೇ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಯಿತೇ ಎಂಬ ದಿಕ್ಕಿನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ವಿವರಿಸಿವೆ. ರೇಣುಕಾಸ್ವಾಮಿಯನ್ನು ಕೊಲೆ ಮಾಡದೆ ಕೇವಲ ಶಾಕ್‌ ನೀಡುವ ಮೂಲಕ ಮತ್ತೆ ಯಾವುದೇ ಹೆಣ್ಣು ಮಕ್ಕಳ ತಂಟೆಗೆ ಹೋಗದಂತೆ ಮಾಡಬೇಕು ಎಂಬ ಉದ್ದೇಶ ಡಿ ಗ್ಯಾಂಗ್‌ ಗೆ ಇತ್ತು ಎನ್ನಲಾಗಿದೆ. ಆದರೆ, ಬಿದ್ದ ಏಟಿನಿಂದ ರೇಣುಕಾಸ್ವಾಮಿ ಇಹಲೋಕ ತ್ಯಜಸಿದ್ದರಿಂದ ಇದೀಗ ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿರಬಹುದು ಎನ್ನಲಾದ ಚಿತ್ರಹಿಂಸೆ ಪ್ರಕರಣಗಳು ಒಂದೊಂದಾಗಿ ಹೊರ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ.
eesanje/url_46_106_7.txt ADDED
@@ -0,0 +1,19 @@
 
 
 
 
 
 
 
 
 
 
 
 
 
 
 
 
 
 
 
 
1
+ ಬಸ್‌‍ ಟಿಕೆಟ್‌ ದರ ಸದ್ಯಕ್ಕೆ ಏರಿಸಲ್ಲ ಎನ್ನುತ್ತಲೇ ಏರಿಕೆಯ ಸುಳಿವು ನೀಡಿದ ಸಿಎಂ
2
+ ಬೆಂಗಳೂರು,ಜೂ.17-ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಬೆನ್ನಲ್ಲೇ ಬಸ್‌‍ ಟಿಕೆಟ್‌ ದರದ ಏರಿಕೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷ ಸುಳಿವು ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸಂಪನೂಲ ಕ್ರೂಢೀಕರಣಕ್ಕೆ ನಾವು ಪ್ರಯತ್ನ ಮಾಡಿದ್ದೇವೆ. ಜನರಿಗೆ ಹೊರೆಯಾಗುವಂತಹ ತೆರಿಗೆಗಳನ್ನು ವಿಧಿಸುವುದಿಲ್ಲ ಎಂದು ತಿಳಿಸಿದರು.
3
+ ಬಸ್‌‍ ಪ್ರಯಾಣ ದರ ಏರಿಕೆಯಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಬಸ್‌‍ ದರ ಏರಿಕೆಯಾಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಹೆಚ್ಚಳ ಮಾಡುವ ಸಾಧ್ಯತೆ ಇಲ್ಲ. ಆದರೆ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳುವ ಮೂಲಕ ಪ್ರಯಾಣದರದ ಏರಿಕೆಯ ಸುಳಿವು ನೀಡಿದರು.
4
+ ಕೇಂದ್ರ ಸರ್ಕಾರ ರಾಜ್ಯದ ಪಾಲನ್ನು ನ್ಯಾಯೋಚಿತವಾಗಿ ನೀಡಿದರೆ ನಮಗೆ ಪೆಟ್ರೋಲ್‌, ಡೀಸೆಲ್‌ ಮೇಲೆ ಮಾರಾಟ ತೆರಿಗೆಯನ್ನು ಹೆಚ್ಚಿಸುವ ಅಗತ್ಯವೇ ಬರುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
5
+ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ :ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಮಾಡುತ್ತಿದ್ದರೂ ಬಾಯಿ ಬಿಡದ ಬಿಜೆಪಿಯವರು, ಈಗ ರಾಜ್ಯ ಸರ್ಕಾರ ಸಂಪನೂಲ ಕ್ರೋಢಿಕರಣಕ್ಕಾಗಿ ಮಾರಾಟ ತೆರಿಗೆಯನ್ನು ಹೆಚ್ಚಿಸಿದಾಕ್ಷಣ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಬಡವರ ಯೋಜನೆಗಳಿಗೆ ವಿರುದ್ಧವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
6
+ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಎಸ್‌‍ಟಿ ನಂತರ ರಾಜ್ಯಕ್ಕೆ ತೆರಿಗೆ ಹೆಚ್ಚು ಮಾಡುವ ಸ್ವಾತಂತ್ರ್ಯ ಕಡಿಮೆಯಾಗಿದೆ. ಅಬಕಾರಿ, ಮೋಟಾರು ಟ್ಯಾಕ್‌್ಸ, ಸ್ಟಾಂಟ್‌ ಡ್ಯೂಟಿ, ಪೆಟ್ರೋಲ್‌, ಡಿಸೇಲ್‌ ಮೇಲೆ ಮಾತ್ರ ತೆರಿಗೆ ಪರಿಷ್ಕರಣೆಗೆ ಅವಕಾಶ ಉಳಿದಿದೆ. ಉಳಿದ ಎಲ್ಲಾ ಜಿಎಸ್‌‍ಟಿಯನ್ನು ಕೇಂದ್ರ ಸರ್ಕಾರವೇ ಸಂಗ್ರಹಿಸುತ್ತಿದೆ. ಅದರಲ್ಲಿ ರಾಜ್ಯಕ್ಕೆ ಕಡಿಮೆ ಪಾಲು ಕೊಡುತ್ತಿದೆ.
7
+ 14 ಮತ್ತು 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ 1.87 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ತೆರಿಗೆ ಪಾಲು ಹಾಗೂ ಕೇಂದ್ರದಿಂದ ಬರುವ ಅನುದಾನವೂ ಕಡಿಮೆಯಾಗಿದೆ. ಜಿಎಸ್‌‍ಟಿ ತೆರಿಗೆಯಲ್ಲಿ 5495 ಕೋಟಿ ಪಾಲು ಕಡಿಮೆಯಾಗಿದೆ, ಅದನ್ನು ಸರಿತೂಗಿಸಲು ವಿಶೇಷ ಅನುದಾನ ಕೊಡುತ್ತೇವೆ ಎಂದು 15ನೇ ಹಣಕಾಸು ಆಯೋಗ ಹೇಳಿತ್ತು, ಅದರ ಬಗ್ಗೆ ಮಾತನಾಡಲಿಲ್ಲ. ಬೆಂಗಳೂರಿನ ಕೆರೆಗಳು, ಫೆರಿಫರಲ್‌ ರಿಂಗ್‌ ರಸ್ತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಲಾಗಿದ್ದ ಹಣ ಬಿಡುಗಡೆಯಾಗದಿದ್ದಾಗ ಬಿಜೆಪಿಯವರು ಮಾತನಾಡಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
8
+ ಕರ್ನಾಟಕ ಸರ್ಕಾರ ಪಾಪರ್‌ ಆಗಿದೆ ಎನ್ನುತ್ತಿದ್ದಾರೆ. ಪಾಪರ್‌ ಎಂದರೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ಗೆ ಅರ್ಥ ಗೊತ್ತಾ? ಯಾವುದಾದರೂ ವೇತನ ಅಥವಾ ಬಜೆಟ್‌ನಲ್ಲಿ ಹೇಳಿದ ಯೋಜನೆಗಳಿಗೆ ಹಣ ನಿಲ್ಲಿಸಿದ್ದೇವಾ? ಎಂದು ಮರು ಪ್ರಶ್ನಿಸಿದರು.
9
+ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗ 2014 ಜೂನ್‌ನಲ್ಲಿ ಪೆಟ್ರೋಲ್‌ ಮೇಲೆ ಕೇಂದ್ರ ಅಬಕಾರಿ ಸುಂಕ 9.48 ರೂಪಾಯಿ ಇತ್ತು. ಅದು 2020 ಮೇ ವೇಳೆಗೆ 32.98 ರೂಪಾಯಿ ಆಗಿದೆ. 23.50 ರೂಪಾಯಿ ಹೆಚ್ಚಾಗಿದೆ. ಡೀಸೆಲ್‌ ಮೇಲೆ 3.56 ರೂ. ಕೇಂದ್ರ ಅಬಕಾರಿ ತೆರಿಗೆ 31.81 ರೂಪಾಯಿ ಆಗಿದೆ. 28.27 ರೂಪಾಯಿ ಹೆಚ್ಚಾಗಿದೆ. ಆಗ ಬಿಜೆಪಿಯವರು ಪ್ರತಿಭಟನೆ ಮಾಡಲಿಲ್ಲ. ಕೇಂದ್ರ ತೆರಿಗೆ ಹೆಚ್ಚಳದಿಂದ ಜನಸಾಮಾನ್ಯರಿಗೆ ಹೊರೆಯಾಗಲಿಲ್ಲವೇ?, ಬಡವರು, ರೈತರು ಹಾಗೂ ಸಾಮಾನ್ಯ ಜನರ ಪರವಾಗಿರುವ ಬಿಜೆಪಿಯವರು ಹಾಗೂ ಇತರರು ಕೇಂದ್ರ ತೆರಿಗೆಯನ್ನು ಏಕೆ ವಿರೋಧಿಸಲಿಲ್ಲ? ಎಂದು ಪ್ರಶ್ನಿಸಿದರು.
10
+ 2014ರಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ ಕಚ್ಚಾ ತೈಲದ ಬೆಲೆ 113 ಡಾಲರ್‌ ಇತ್ತು. 2015ರಲ್ಲಿ 50 ಡಾಲರ್‌ಗೆ ಇಳಿಯಿತು. 2016ರಲ್ಲಿ ಅದಕ್ಕಿಂತ ಕಡಿಮೆಯಾಯಿತು. ಈಗ 82.35 ಡಾಲರ್‌ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಯಿತು. ಆದರೆ ದೇಶಿಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗಿದೆ. 410 ರೂ ಇದ್ದ ಅಡುಗೆ ಸಿಲಿಂಡರ್‌ ಬೆಲೆ 200 ರೂ ದರ ಇಳಿಸಿದ ಬಳಿಕವೂ 805.50 ಆಗಿದೆ ಎಂದರು.
11
+ ಬಡವರು ಮತ್ತು ಶ್ರೀಸಾಮಾನ್ಯರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿಯವರು ಯಾರ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ನಮಗೆ ಪಾಠ ಹೇಳುತ್ತಾರಾ ? ಬರ ಪರಿಹಾರ ತೆಗೆದುಕೊಳ್ಳಲು ಕೋರ್ಟ್‌ಗೆ ಹೋದ ಮೇಲೆ ನ್ಯಾಯಾಲಯದ ನಿರ್ದೇಶನದ ಮೇರೆಗೆ 3453 ರೂಪಾಯಿ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.
12
+ ಬಿಜೆಪಿ ಬಡವರ, ಸಾಮಾನ್ಯರ ಕಾರ್ಯಕ್ರಮಗಳಿಗೆ ವಿರುದ್ಧವಾಗಿದ್ದಾರೆ. ನಾವು ಗ್ಯಾರಂಟಿ ಕೊಟ್ಟಿರುವುದು ಜನ ಸಾಮಾನ್ಯರಿಗಾಗಿ. ಇವುಗಳಿಂದ ಬಡವರ ಕೊಳ್ಳುವ ಆರ್ಥಿಕ ಶಕ್ತಿ ಹೆಚ್ಚಾಗಿದೆ ಎಂದು ವಿವರಿಸಿದರು. ರಾಜ್ಯದಲ್ಲಿ ಮಾರಾಟ ತೆರಿಗೆ ಪರಿಷ್ಕರಣೆಯ ಬಳಿಕ ಬೆಂಗಳೂರಿನಲ್ಲಿ ಪೆಟ್ರೋಲ್‌ ಲೀಟರ್‌ಗೆ 102.85 ರೂಪಾಯಿಗೆ ಮಾರಾಟವಾಗುತ್ತಿದೆ. ಮೊದಲು 99.85 ರೂಗಳಿತ್ತು. ನೆರೆಯ ತಮಿಳುನಾಡಿನ ಹೊಸೂರಿನಲ್ಲಿ 102.84, ಕೇರಳದ ಕಾಸರಗೂಡಿನಲ್ಲಿ 106.64 ರೂ, ಆಂಧ್ರ ಪ್ರದೇಶದಲ್ಲಿ 109.44, ತೆಲಂಗಾಣದಲ್ಲಿ 107.40, ಬಿಜೆಪಿ ಆಡಳಿತದಲ್ಲಿರುವ ಮಹಾರಾಷ್ಟ್ರದಲ್ಲಿ 104.46 ರೂಪಾಯಿ ದರವಿದೆ.
13
+ ಡೀಸೆಲ್‌ 85.94 ಇದ್ದದ್ದು ಮೂರು ರೂ. ಮಾರಾಟ ತೆರಿಗೆ ಹೆಚ್ಚಳದ ಬಳಿಕ 88.94 ಆಗಿದೆ. ಹೋಸೂರಿನಲ್ಲಿ 94.81 ರೂ, ಕಾಸರಗೋಡಿನಲ್ಲಿ 95.60, ಆಂಧ್ರ ಪ್ರದೇಶದಲ್ಲಿ 97, ತೆಲಂಗಾಣದಲ್ಲಿ 95, ಮಹಾರಾಷ್ಟ್ರದಲ್ಲಿ 91.01 ರೂಪಾಯಿ ಇದೆ. ಇನ್ನೂ ಬಿಜೆಪಿ ಆಡಳಿತದ ರಾಜಸ್ಥಾನದಲ್ಲಿ ಪೆಟ್ರೋಲ್‌ 104.86 , ಮಧ್ಯಪ್ರದೇಶದಲ್ಲಿ107.47 ರೂ. ರಾಜಸ್ಥಾನದಲ್ಲಿ ಡೀಸೆಲ್‌ 90.36, ಗುಜರಾತ್‌ನಲ್ಲಿ 90.21, ಮಧ್ಯ ಪ್ರದೇಶದಲ್ಲಿ 91.84 ರೂ ಇದೆ. ಬಿಜೆಪಿಯವರು ಅಲ್ಲೆಲ್ಲಾ ಏಕೆ ಗಲಾಟೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
14
+ ರಾಜ್ಯಕ್ಕೆ ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಒಂದು ದಿನ ಬಾಯಿ ಬಿಡಲಿಲ್ಲ. ಇವರಿಗೆ ನಮ ಸರ್ಕಾರವನ್ನು ಟೀಕಿಸಲು ಯಾವ ನೈತಿಕತೆ ಇದೆ ಎಂದ ಅವರು, ಬಡವರ ಕೆಲಸಗಳಿಗೆ ಕಲ್ಲು, ಹಾಕಿ ಬಡವರ ಹೊಟ್ಟೆಯ ಮೇಲೆ ಹೊಡೆಯುವುದೇ ಬಿಜೆಪಿಯವರ ಕೆಲಸ ಎಂದು ಟೀಕಿಸಿದರು.
15
+ ಸಂಪನೂಲ ಸಂಗ್ರಹಿಸಿ, ರಾಜ್ಯವನ್ನು ಅಭಿವೃದ್ಧಿ ಮಾಡುವುದೇ ನಮ ಉದ್ದೇಶ. ಕೇಂದ್ರ ಸರ್ಕಾರ ದೊಡ್ಡ ಅನ್ಯಾಯ ಮಾಡುತ್ತಿದೆ. ಬಿಜೆಪಿಯವರು ಒಂದು ದಿನವೂ ಚಕಾರ ಎತ್ತಲಿಲ್ಲ. ಆರು ತಿಂಗಳು ಬರಗಾಲಕ್ಕೆ ಹಣ ನೀಡದಿದ್ದರೂ ಮಾತನಾಡಲಿಲ್ಲ. ಈಗ ಬಿಜೆಪಿಗೆ ಬೇರೆ ವಿಚಾರಗಳಿಲ್ಲ. ಅದಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆಶೋಕ್‌ಗೆ ದೇಶದ ಆರ್ಥಿಕತೆ ಗೊತ್ತಿಲ್ಲ. ಹೆಚ್‌.ಡಿ.ಕುಮಾರಸ್ವಾಮಿ ಜನರಿಗೆ ದಂಗೆ ಏಳಿ ಎಂದು ಕರೆ ನೀಡಿದ್ದಾರೆ. ರಾಜ್ಯಕ್ಕೆ ಅನ್ಯಾಯವಾದಾಗ ಒಂದು ದಿನವೂ ಮಾತನಾಡಲಿಲ್ಲ. ಬಿಜೆಪಿ ಜೊತೆ ಮೈತ್ರಿ ಬಳಿಕವೂ ಮೌನಕ್ಕೆ ಶರಣಾಗಿದ್ದರು ಎಂದು ಸಿಡಿಮಿಡಿ ವ್ಯಕ್ತಪಡಿಸಿದರು.
16
+ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬುದು ಸುಳ್ಳು. ಹಾಗೆಂದ ಮಾತ್ರಕ್ಕೆ ಹಣಕಾಸು ತುಂಬಿ ತುಳುಕುತ್ತಿಲ್ಲ, ಪೆಟ್ರೋಲ್‌ ಡೀಸೆಲ್‌ನಿಂದ 3 ಸಾವಿರ ಕೋಟಿ ಬರಬಹುದು. ಗ್ಯಾರಂಟಿಗಳಿಗೆ 60 ಸಾವಿರ ಕೋಟಿ ಖರ್ಚಾಗುತ್ತಿದೆ. ನಾವು ಆ ಹಣವನ್ನು ಶ್ರೀಮಂತರಿಗೆ ಕೊಡುತ್ತಿಲ್ಲ. ನರೇಂದ್ರ ಮೋದಿ ರೀತಿ ಅಂಬಾನಿ ಅದಾನಿಯಂತಹ ಶ್ರೀಮಂತರಿಗೆ ಸಾಲ ಮನ್ನಾ ಮಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.
17
+ ನರೇಂದ್ರ ಮೋದಿ ಕೂಡ ನಮ ಹಾಗೇಯೇ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಿಯೇ ಅಧಿಕಾರಕ್ಕೆ ಬಂದವರು. ಅಚ್ಚೆ ದಿನ್‌ ಆಯೇಗಾ ಎಂದು ಹೇಳಿದರು. ನಾವು ಆ ರೀತಿ ಹೇಳಲಿಲ್ಲ. ಚುನಾವಣೆ ಪ್ರಚಾರದಲ್ಲಿ ತೆರಿಗೆ ಹಾಕಲ್ಲ ಎಂದು ನಾವು ಹೇಳಿಲ್ಲ, ಹೇಳಿದ್ದರೆ ತೋರಿಸಿ ಎಂದು ಸವಾಲು ಹಾಕಿದರು.
18
+ ಐದು ವರ್ಷ ನರೇಂದ್ರ ಮೋದಿ ಯದ್ವಾತದ್ವ ಬೆಲೆ ಏರಿಕೆ ಮಾಡಿದರೂ ಕಡಿಮೆ ಮಾಡಿ ಎಂದು ಬಿಜೆಪಿಯವರು ಕೇಳಲಿಲ್ಲ. ಸಂಸತ್‌ ಚುನಾವಣೆಯಲ್ಲಿ ಸೋಲಿಗಾಗಿ ದರ ಹೆಚ್ಚಿಸಲಾಗಿದೆ ಎಂಬುದು ಸುಳ್ಳು. ಕಾಂಗ್ರೆಸ್‌‍ಗೆ ಶೇ.31.ರಿಂದ 45 ಮತ ಗಳಿಕೆ ಅಂದರೆ ಶೇ.13ರಷ್ಟು ಹೆಚ್ಚಾಗಿದೆ. 2019ರಲ್ಲಿ ಕಾಂಗ್ರೆಸ್‌‍ ಒಂದು ಸ್ಥಾನ ಮಾತ್ರ ಗೆದ್ದಿತ್ತು, ಈಗ 9ರಲ್ಲಿ ಗೆದಿದ್ದೇವೆ. 25 ಸ್ಥಾನ ಗೆದಿದ್ದ ಬಿಜೆಪಿಯವರು 17ಕ್ಕೆ ಇಳಿದಿದ್ದಾರೆ. ಜೆಡಿಎಸ್‌‍ನೊಂದಿಗೆ ಮೈತ್ರಿಯಿಂದಾಗಿ ಬಿಜೆಪಿ ಕಾಂಗ್ರೆಸ್‌‍ಗಿಂತ ಸ್ವಲ್ಪ ಪ್ರಮಾಣದಷ್ಟು ಮಾತ್ರ ಮತ ಹೆಚ್ಚು ಗಳಿಸಿದೆ. ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಕಡಿಮೆ ಸ್ಥಾನ ಗಳಿಸಿದೆ, ಸೋತಿದೆ. ನಾವು ಗೆದ್ದಿದ್ದೇವೆ ಎಂದು ವಿವರಿಸಿದರು.
19
+ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅವನ್ನು ಮತಕ್ಕಾಗಿ ಮಾಡಿದ್ದಲ��ಲ. ಯಾವುದನ್ನೂ ನಿಲ್ಲಿಸುವುದಿಲ್ಲ, ಎಲ್ಲ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದರು. ಸಚಿವರಾದ ಬೈರತಿ ಬಸವರಾಜು, ಚಲುವರಾಯಸ್ವಾಮಿ, ಶಾಸಕ ನರೇಂದ್ರ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
eesanje/url_46_106_8.txt ADDED
@@ -0,0 +1,5 @@
 
 
 
 
 
 
1
+ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುತ್ತಿರುವ ಬಿಜೆಪಿಗರ ವಿರುದ್ಧ ಜಮೀರ್‌ ಆಕ್ರೋಶ
2
+ ಬೆಂಗಳೂರು, ಜೂ.17-ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬೊಬ್ಬೆ ಹಾಕುತ್ತಿರುವ ಬಿಜೆಪಿ ನಾಯಕರು ಅವರ ಆಡಳಿತದಲ್ಲಿ ಶತಕದ ಗಡಿ ದಾಟಿದಾಗ ಯಾಕೆ ಧ್ವನಿ ಎತ್ತಲಿಲ್ಲ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.
3
+ ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, 2013 ರಲ್ಲಿ ಯುಪಿಎ ಸರ್ಕಾರ ಇದ್ದಾಗ ಪೆಟ್ರೋಲ್‌ -ಡೀಸೆಲ್‌‍, ಅಡುಗೆ ಅನಿಲ ಬೆಲೆ ಎಷ್ಟು ಇತ್ತು? ಬಿಜೆಪಿ ಸರ್ಕಾರ ಹತ್ತು ವರ್ಷಗಳಲ್ಲಿ ಎಷ್ಟು ಹೆಚ್ಚು ಮಾಡಿ ಜನರ ಮೇಲೆ ಭಾರ ಹಾಕಿತು ಎಂಬುದು ಗೊತ್ತಿದೆ. ಈಗಲೂ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲೆ ಕೇಂದ್ರ ಅಬಕಾರಿ ಸುಂಕ ಕರ್ನಾಟಕದಲ್ಲಿ ಹೆಚ್ಚು ಸಂಗ್ರಹ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
4
+ ಕರ್ನಾಟಕ ದಲ್ಲಿ ತೆರಿಗೆ ಹೆಚ್ಚಳ ನಂತರ ಪೆಟ್ರೋಲ್‌ 102.85 ರೂ., ಡಿಸೇಲ್‌ 88.91 ರೂ. ಇದೆ. ಆದರೆ ದಕ್ಷಿಣ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಈಗಲೂ ನಮದೇ ಕಡಿಮೆ ಎಂದು ಅವರು ಹೇಳಿದ್ದಾರೆ.
5
+ ಕಚ್ಚಾ ತೈಲ ಬೆಲೆ ಹೆಚ್ಚಿದ್ದಾಗ ಯುಪಿಎ ಸರ್ಕಾರ ಪೆಟ್ರೋಲ್‌‍, ಡೀಸೆಲ್‌ ಬೆಲೆ ಹೆಚ್ಚಳ ಮಾಡಿರಲಿಲ್ಲ, ಆದರೆ ಕೇಂದ್ರ ಬಿಜೆಪಿ ಸರ್ಕಾರ ಕಚ್ಚಾ ತೈಲ ಬೆಲೆ ಇಳಿಕೆ ಆಗಿದ್ದಾರೂ ಬೆಲೆ ಹೆಚ್ಚಿಸಿ ಜನರಿಗೆ ವಂಚನೆ ಮಾಡಿತು. ಹೀಗಾಗಿ ಬಿಜೆಪಿ ಅವರಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ.
eesanje/url_46_106_9.txt ADDED
@@ -0,0 +1,5 @@
 
 
 
 
 
 
1
+ ಬಿಎಸ್‌‍ವೈ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ : ಸಚಿವ ತಿಮ್ಮಾಪೂರ
2
+ ಮುಧೋಳ ,ಜೂ.17- ಜೂ.17-ಮಾಜಿ ಮುಖ್ಯಮಂತ್ರಿ ಬಿ.ಎಸ್‌‍. ಯಡೆಯೂರಪ್ಪನವರ ವಿರುದ್ಧದ ಫೋಕ್ಸೊ ಪ್ರಕರಣದಲ್ಲಿ ಸರ್ಕಾರ ಯಾವುದೇ ರೀತಿ ಹಸ್ತಕ್ಷೇಪ ಮಾಡುವುಲ್ಲ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಐಡಿ ಸಂಸ್ಥೆ ತನಿಖೆ ನಡೆಸುತ್ತಿದ್ದು, ನ್ಯಾಯಾಲಯದ ನಿರ್ದೇಶನದಂತೆ ತನಿಖಾಧಿಕಾರಿಗಳ ಮುಂದೆ ವಿಚಾರಣೆಗಾಗಿ ಹಾಜರಾಗುವಂತೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ.
4
+ ಇಳಿವಯಸಿನಲ್ಲಿ ಅವರಿಗೆ ಇಂತಹ ಪ್ರಕರಣ ಎದುರಾಗಬಾರದಿತ್ತು. ಆದರೆ ಸಂತ್ರಸ್ತೆ ದೂರು ದಾಖಲಿಸಿರುವುದರಿಂದ ಪ್ರಕರಣಕ್ಕೆ ಅವರು ತನಿಖೆಗೆ ಸಹಕರಿಸಲೇಬೇಕಾಗುತ್ತದೆ. ಇದರಿಂದ ಕೆಲವರು ಮುಂಡಿಟ್ಟುಕೊಂಡು ಜಾತಿ ಲೇಪನ ಮಾಡಲು ಮುಂದಾಗುತ್ತಿದ್ದಾರೆ.
5
+ ಇದರಲ್ಲಿ ಸರ್ಕಾರದ ಯಾವುದೇ ರೀತಿಯ ಪಾತ್ರವಿರುವುದಿಲ್ಲ. ಮುಖ್ಯಮಂತ್ರಿಗಳಾಗಲೀ, ಉಪಮುಖ್ಯಮಂತಿಗಳಾಗಲೀ ಈ ಪ್ರಕರಣದಲ್ಲಿ ಯಾವುದೇ ರೀತಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
eesanje/url_46_107_1.txt ADDED
@@ -0,0 +1,5 @@
 
 
 
 
 
 
1
+ ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಖಂಡಿಸಿ ನಾಳೆ ಜೆಡಿಎಸ್ ಪ್ರತಿಭಟನೆ
2
+ ಬೆಂಗಳೂರು,ಜೂ.17– ಏರಿಕೆ ಮಾಡಿರುವ ಪೆಟ್ರೋಲ್‌, ಡೀಸೆಲ್‌ ದರವನ್ನು ಇಳಿಕೆ ಮಾಡುವಂತೆ ಒತ್ತಾಯಿಸಿ ಜೆಡಿಎಸ್‌‍ ನಾಳೆ ಪ್ರತಿಭಟನೆ ನಡೆಸಲಿದೆ.ಬೆಂಗಳೂರು ಮಹಾನಗರ ಜೆಡಿಎಸ್‌‍ ವತಿಯಿಂದ ರಾಜ್ಯಸರ್ಕಾರದ ವಿರುದ್ಧ ನಾಳೆ ಬೆಳಿಗ್ಗೆ 10.30 ಕ್ಕೆ ಸ್ವಾತಂತ್ರ್ಯ ಉದ್ಯಾನವನದಿಂದ ವಿಧಾನಸೌಧದವರೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
3
+ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಜೆಡಿಎಸ್‌‍ ಅಧ್ಯಕ್ಷ ಎಚ್‌.ಎನ್‌.ರಮೇಶ್‌ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
4
+ ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ವಿವಿಧ ವಿಭಾಗಗಳ ಪದಾಧಿಕಾರಿಗಳು, ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
5
+ ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌‍ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವುದಾಗಿ ತಿಳಿಸಿದ್ದಾರೆ.
eesanje/url_46_107_10.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌‍ಗೆ ಮತ ಹಾಕಬೇಡಿ : ಜನತೆಗೆ ಆರ್‌.ಅಶೋಕ್‌ ಕರೆ
2
+ ಬೆಂಗಳೂರು, ಜೂ.16-ಡೀಸೆಲ್‌, ಪೆಟ್ರೋಲ್‌ ದರ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆ ಮಾಡಿರುವ ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷಕ್ಕೆ ಮುಂಬರುವ ಜಿಲ್ಲಾ, ತಾಲ್ಲೂಕು ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ಯಾರೊಬ್ಬರೂ ಮತ ಹಾಕಬಾರದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
3
+ ಕಾಂಗ್ರೆಸ್‌‍ ಪಕ್ಷದಿಂದ ಸಚಿವರು ಇಲ್ಲವೇ ಶಾಸಕರ ಅಣ್ಣ-ತಮಂದಿರು, ಅಕ್ಕ-ತಂಗಿಯರು ಇಲ್ಲವೇ ಸಂಬಂಧಿಕರೇ ಸ್ಪರ್ಧೆ ಮಾಡಿದರೂ ಅವರಿಗೆ ಒಂದೇ ಒಂದು ಮತ ಹಾಕಬೇಡಿ. ನೀವು ಕಾಂಗ್ರೆಸ್‌‍ಗೆ ಮತ ಹಾಕುವುದರಿಂದ ಮತ್ತಷ್ಟು ದರದ ಬಿಸಿಯನ್ನು ಅನುಭವಿಸುತ್ತೀರಿ ಎಂದು ಎಚ್ಚರಿಸಿದರು.
4
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5 ಗ್ಯಾರಂಟಿಗಳನ್ನು ಜಾರಿ ಮಾಡಿ ಕರ್ನಾಟಕದ ಜನರು ಸಂತೃಪ್ತರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೊಗಳೆ ಬಿಡುತ್ತಿದ್ದಾರೆ. ದೇಶದಲ್ಲಿ ಕರ್ನಾಟಕ ಮಾದರಿ ಚರ್ಚೆಯಾಗುತ್ತಿದೆ ಎಂದು ಮತ್ತೊಂದು ಹಸಿಸುಳ್ಳು ಹೇಳಿದ್ದಾರೆ. ನಿಜವಾಗಿಯೂ ಚರ್ಚೆಯಾಗುತ್ತಿರುವುದು ಏಕಾಏಕಿ ಇಷ್ಟು ದೊಡ್ಡಮಟ್ಟದಲ್ಲಿ ಡೀಸೆಲ್‌, ಪೆಟ್ರೋಲ್‌ ದರವನ್ನು ಏರಿಸಿದ್ದು ಏಕೆ ಎಂಬುದಾಗಿ ಅಶೋಕ್‌ ನುಡಿದರು.
5
+ ಮುಂಬರುವ ಸ್ಥಳೀಯ ಸಂಸ್ಥೆಗಳು ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್‌‍ ಪಕ್ಷಕ್ಕೆ ಚೊಂಬು ಕೊಡುವುದು ಗ್ಯಾರಂಟಿ. ಜನವಿರೋಧಿ ಸರ್ಕಾರ ಇದು ಇದ್ದರೆಷ್ಟು, ಬಿಟ್ಟರೆಷ್ಟು ಎಂದು ಎಲ್ಲರೂ ಹಿಡಿಶಾಪ ಹಾಕುತ್ತಿದ್ದಾರೆ. ಅವರ ಕಣ್ಣೀರಿನ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರುವುದಿಲ್ಲ ಎಂದು ಟೀಕಾಪ್ರಹಾರ ನಡೆಸಿದರು.
6
+ ಮಾತೆತ್ತಿದರೆ ನಾನು 14 ಬಜೆಟ್‌ ಮಂಡಿಸಿದ್ದೇನೆ ಎಂದು ಬಡಾಯಿ ಕೊಚ್ಚಿಕೊಳ್ಳುವ ಸ್ವಯಂಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯ ಅವರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಸರ್ಕಾರದ ಬೊಕ್ಕಸಕ್ಕೆ ಎಷ್ಟು ಹೊರೆಯಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಇರಲಿಲ್ಲವೇ? ರಾಜ್ಯದ ಜನತೆ ಈ ದರಿದ್ರ ಸರ್ಕಾರ ಅಧಿಕಾರದಿಂದ ಹೋದರೆ ಸಾಕು ಎಂದು ಎದುರು ನೋಡುತ್ತಿದ್ದಾರೆ. ಯಾವ ನೈತಿಕತೆ ಇಟ್ಟುಕೊಂಡು ಅಧಿಕಾರದಲ್ಲಿ ಸಿದ್ದರಾಮಯ್ಯ ಮುಂದುವರೆಯುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.
7
+ ಲೋಕಸಭಾ ಚುನಾವಣೆಯಲ್ಲಿ ನಮಗೆ ಮತ ಹಾಕಿಲ್ಲ ಎಂಬ ಒಂದೇ ಕಾರಣಕ್ಕಾಗಿ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಮಾಡಲಾಗಿದೆ. ನಿಮಗೆ ಸೇಡಿದ್ದರೆ ಬಿಜೆಪಿ ಮೇಲೆ ತೀರಿಸಿಕೊಳ್ಳಿ. ಅದನ್ನು ಬಿಟ್ಟು ಶ್ರೀಸಾಮಾನ್ಯರ ಹೊಟ್ಟೆಪಾಡಿಗೆ ಕಲ್ಲು ಹಾಕುವ ಕೆಲಸ ಮಾಡಬೇಡಿ. ಬಡವರು ರೊಚ್ಚಿಗೆದ್ದರೆ ಕಾಂಗ್ರೆಸ್‌‍ ರಾಜ್ಯದಲ್ಲಿ ಸರ್ವನಾಶವಾಗುತ್ತದೆ ಎಂದು ಅಶೋಕ್‌ ಎಚ್ಚರಿಕೆ ಕೊಟ್ಟರು.
8
+ ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿ��ಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತತ್‌ಕ್ಷಣವೇ ಶ್ವೇತಪತ್ರ ಹೊರಡಿಸಲಿ. ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂಬುದು ನನಗೂ ಗೊತ್ತಿದೆ. ಹಣಕಾಸು ಇಲಾಖೆಯಲ್ಲಿ ನನಗೂ ಬೇಕಾದ ಅಧಿಕಾರಿಗಳಿದ್ದಾರೆ ಎಂದರು.ಸರ್ಕಾರಿ ಅಧಿಕಾರಿಗಳಿಗೆ ಪ್ರತಿಯೊಬ್ಬರೂ ಕಿರುಕುಳ ನೀಡುತ್ತಿದ್ದಾರೆ. ಇಲಾಖೆಗೆ ಬರಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ.
9
+ ಇಲಾಖೆಯಲ್ಲಿ ನಯಾಪೈಸೆ ಹಣ ಇಲ್ಲದಿದ್ದರೂ ಕೆಲವರು ಬಿಲ್‌ಗಳನ್ನು ಬಿಡುಗಡೆ ಮಾಡಲು ಒತ್ತಡ ಹೇರುತ್ತಿದ್ದಾರೆ. ವೇತನ ಆಯೋಗದ ವರದಿಯನ್ನು ಕಸದ ಡಬ್ಬಿಗೆ ಎಸೆಯಲಾಗಿದೆ. ಸರ್ಕಾರಿ ನೌಕರರು ನಮಗೆ ಮತ ಹಾಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳುತ್ತಾರೆ. ಇದೊಂದು ಆಡಳಿತ ನಡೆಸುವ ವ್ಯವಸ್ಥೆಯೇ ಎಂದು ತರಾಟೆಗೆ ತೆಗೆದುಕೊಂಡರು.
10
+ ಕಾಂಗ್ರೆಸ್‌‍ ಪಕ್ಷದ ಶಾಸಕರೇ ಸಿಎಂ ಮತ್ತು ಡಿಸಿಎಂ ಮೇಲೆ ತಿರುಗಿಬಿದ್ದಿದ್ದಾರೆ. ಯಾರೂ ಅನುಮಾನ ಕೇಳದೇ ಬಾಯಿ ಮುಚ್ಚಿಕೊಂಡು ಇರಿ ಎಂದು ಡಿ.ಕೆ.ಶಿವಕುಮಾರ್‌ ಶಾಸಕರಿಗೆ ಬೆದರಿಕೆ ಹಾಕುತ್ತಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಡಿ.ಕೆ.ಸುರೇಶ್‌ ಹಾಗೂ ಶಿವಕುಮಾರ್‌ಗೆ ಹೊಟ್ಟೆಗೆ ಹಸಿಮೆಣಸಿನಕಾಯಿ ಇಟ್ಟುಕೊಂಡಂತಾಗಿದೆ ಎಂದು ವ್ಯಂಗ್ಯವಾಡಿದರು.
11
+ ಶಾಸಕರು ತಮ ಮನೆಬಾಗಿಲಿಗೆ ಬರಬೇಡಿ ಎಂದು ಶಿವಕುಮಾರ್‌ ಹೇಳುತ್ತಾರೆ. ಸಹೋದರನ ಸೋಲಿನಿಂದ ಅವರು ಪೂರಾ ಹತಾಶರಾಗಿದ್ದಾರೆ. ಯಾರು ಮತ ಹಾಕಿಲ್ಲವೋ ಅವರ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್‌‍ಗೆ ಸೋಲು ಎಷ್ಟು ಹತಾಶೆ ಉಂಟುಮಾಡಿದೆ ಎಂದರೆ ಡೀಸೆಲ್‌ ಮತ್ತು ಪೆಟ್ರೋಲ್‌ ಮಾರಾಟದ ಮೇಲಿನ ತೆರಿಗೆ ಹೆಚ್ಚಳವೇ ಸಾಕ್ಷಿ ಎಂದು ಹೇಳಿದರು.
12
+ ಸಿಎಂ ಸಿದ್ದರಾಮಯ್ಯನವರು ಔಟ್‌ ಗೋಯಿಂಗ್‌ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಬಜೆಟ್‌ ಒಂದು ಬೋಗಸ್‌‍ ಎಂದು ನಾನು ಸದನದಲ್ಲಿ ಹೇಳಿದ್ದೆ. ಆದರೆ ನನ್ನ ಮಾತು ಒಪ್ಪಿರಲಿಲ್ಲ. ಗ್ಯಾರಂಟಿಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗುತ್ತದೆ ಎಂದು ಆರ್ಥಿಕ ತಜ್ಞರು ಹೇಳಿದ್ದರು. ಈಗ ಅವರ ಹಣೆಬರಹ ಏನೆಂಬುದು ಎಲ್ಲರಿಗೂ ಗೊತ್ತಾಗಿದೆ. ಬಜೆಟ್‌ನಲ್ಲಿ ದರ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದರೆ ಜನ ತಿರುಗಿಬೀಳಬಹುದು ಎಂಬ ಕಾರಣಕ್ಕಾಗಿ ಕದ್ದುಮುಚ್ಚಿ ರಾತ್ರೋರಾತ್ರಿ ಏರಿಕೆ ಮಾಡುತ್ತಾರೆ. ಇದರಿಂದ ಪ್ರತಿ ಮನೆಗೆ 1800 ರೂ. ಹೊರೆಯಾಗುತ್ತದೆ. ಇದು ಮನೆಮುರಿಯುವ ಕೆಲಸವಲ್ಲವೇ? ಎಂದು ಅಶೋಕ್‌ ಸಿಡಿಮಿಡಿಗೊಂಡರು.
13
+ ಕಳೆದ ಮೂರು ತಿಂಗಳಿನಿಂದ ಅಕ್ಕಿ ಹಣ ಕೊಟ್ಟಿಲ್ಲ. ಬಿಡಿಎ ನಿವೇಶನಗಳು, ಕಾಂಪ್ಲೆಕ್‌್ಸಗಳನ್ನು ಮಾರಾಟ ಮಾಡಲು ಇಟ್ಟಿದ್ದಾರೆ. ಕಾರ್ಪೊರೇಷನ್‌ ಕಟ್ಟಡ, ಯುಟಿಲಿಟಿ ಬಿಲ್ಡಿಂಗ್‌, ವಾರ್ಡ್‌ ಕಚೇರಿಗಳನ್ನು ಅಡವು ಇಡಲು ನೀಲಿನಕ್ಷೆ ಸಿದ್ಧ ಮಾಡಿದ್ದಾರೆ. ಇವುಗಳನ್ನು ಅಡವಿಟ್ಟು 4 ಸಾವಿರ ಕೋಟಿ ರೂ. ಲೂಟಿ ಹೊಡೆಯಲು ಸರ್ಕಾರ ಮು���ದಾಗಿದೆ.
14
+ ಇದೇ ರೀತಿ ಜಲಮಂಡಳಿಯಲ್ಲಿಯೂ ಸಾವಿರ ಕೋಟಿ ಲೂಟಿ ಹೊಡೆಯುವ ಯೋಜನೆ ಸಿದ್ಧವಾಗಿದೆ. ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಇವೆಲ್ಲವನ್ನೂ ಅಡವಿಟ್ಟು ಸಾಲ ಎತ್ತುವಳಿಗೆ ಡಿಸಿಎಂ ಶಿವಕುಮಾರ್‌ ನೀಲನಕ್ಷೆ ಸಿದ್ಧಪಡಿಸಿದ್ದಾರೆ. ಆರ್ಥಿಕ ಶಿಸ್ತು ಸಂಪೂರ್ಣವಾಗಿ ಹಾಳಾಗಿದೆ. ಕರ್ನಾಟಕವನ್ನು ಸರ್ವನಾಶದತ್ತ ಕೊಂಡೊಯ್ಯುತ್ತಿದ್ದಾರೆ. ಇದೇ ರೀತಿ ಇನ್ನೊಂದು ವರ್ಷ ಬಿಟ್ಟರೆ ವಿಧಾನಸೌಧವನ್ನೂ ಅಡ ಇಡಲಿದ್ದಾರೆ ಎಂದು ಅಶೋಕ್‌ ಆತಂಕ ವ್ಯಕ್ತಪಡಿಸಿದರು.
eesanje/url_46_107_11.txt ADDED
@@ -0,0 +1,6 @@
 
 
 
 
 
 
 
1
+ ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ಕೊಟ್ಟ ಸಾಧನಕ್ಕಾಗಿ ಪೊಲೀಸರ ಶೋಧ
2
+ ಬೆಂಗಳೂರು, ಜೂ.16-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕರಾಳತೆ ಬಗೆದಷ್ಟೂ ಬಯಲಾಗುತ್ತಿದೆ. ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಿರುವುದಲ್ಲದೆ, ಕರೆಂಟ್‌ ಶಾಕ್‌ ಕೊಟ್ಟು ಚಿತ್ರವಿಚಿತ್ರವಾಗಿ ಹಿಂಸೆ ಕೊಟ್ಟಿರುವ ಎಲೆಕ್ಟ್ರಾನಿಕ್‌ ಉಪಕರಣಕ್ಕಾಗಿ ವಿಜಯನಗರ ಉಪವಿಭಾಗದ ಪೊಲೀಸರು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಶೋಧ ನಡೆಸುತ್ತಿದ್ದಾರೆ.
3
+ ಹತ್ಯೆ ಮಾಡಿದ ನಂತರ ರೇಣುಕಾಸ್ವಾಮಿಯ ಶವ ಸಾಗಿಸುವ ಮುನ್ನ ನಟ ದರ್ಶನ್‌ ಭೇಟಿಗೆ ಹೋಗಿದ್ದ ಆರೋಪಿಗಳು ಈ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಕೊಡಲು ಬಳಸಿದ್ದ ಎಲೆಕ್ಟ್ರಾನಿಕ್‌ ಮೆಗ್ಗರ್‌ ಅನ್ನು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಬಿಸಾಡಿದರೆಂದು ತನಿಖೆಯಿಂದ ತಿಳಿದುಬಂದಿದೆ.
4
+ ಈ ಹಿನ್ನೆಲೆಯಲ್ಲಿ ಆ ಹೆದ್ದಾರಿಯಲ್ಲಿ ಪೊಲೀಸರು ಎಲೆಕ್ಟ್ರಾನಿಕ್‌ ಉಪಕರಣಕ್ಕಾಗಿ ಶೋಧ ನಡೆಸುತ್ತಿದ್ದಾರೆ.ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆತಂದು ಮನಬಂದಂತೆ ಥಳಿಸಿ, ಮರ್ಮಾಂಗಕ್ಕೂ ಕಾಲಿನಿಂದ ಒದ್ದಿರುವುದಲ್ಲದೆ, ಕರೆಂಟ್‌ ಶಾಕ್‌ ಕೊಡಲಾಗಿದೆ. ಅಲ್ಲದೆ, ದೇಹದ ಐದಾರು ಭಾಗಗಳಿಗೂ ಸಹ ಕರೆಂಟ್‌ ಶಾಕ್‌ ಕೊಟ್ಟು ಹಿಂಸೆ ನೀಡಲಾಗಿದೆ.
5
+ ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನಾಭರಣ ಕಾಣೆಯಾಗಿದ್ದು, ಆರೋಪಿಗಳು ಅದನ್ನು ದೋಚಿರುವ ಶಂಕೆ ಇದೆ.ಶವದ ಮೇಲಿದ್ದ ಬಟ್ಟೆ ತೆಗೆದು, ಬೇರೆ ಬಟ್ಟೆ ಹಾಕಿ ಶವವನ್ನು ಬಿಸಾಡಿ ಕೆಲವು ಆರೋಪಿಗಳು ಚಿತ್ರದುರ್ಗಕ್ಕೆ, ಮತ್ತೆ ಕೆಲವು ಆರೋಪಿಗಳು ಮೈಸೂರಿಗೆ ತೆರಳಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
6
+ ಈ ಪ್ರಕರಣ ಸಂಬಂಧ ಈಗಾಗಲೇ ನಟ ದರ್ಶನ್‌ ಸೇರಿದಂತೆ 16 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.
eesanje/url_46_107_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಪೆಟ್ರೋಲ್‌-ಡೀಸೆಲ್‌ ತೆರಿಗೆ ಹೆಚ್ಚಿಸಿ ಸುಲಿಗೆಗಿಳಿದ ಗ್ಯಾರಂಟಿ ಸರ್ಕಾರದ ವಿರುದ್ಧ ಜನಾಕ್ರೋಶ
2
+ ಬೆಂಗಳೂರು, ಜೂ.16-ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯನ್ನು ಹೆಚ್ಚಿಸುವ ಮೂಲಕ ರಾಜ್ಯಸರ್ಕಾರ ಜನಾಕ್ರೋಶಕ್ಕೆ ಕಾರಣವಾಗಿದೆ.ನಿನ್ನೆ ಏಕಾಏಕಿ ಸರ್ಕಾರಿ ಆದೇಶ ಜಾರಿ ಮಾಡಿ ತಕ್ಷಣದಿಂದಲೇ ಜಾರಿಯಾಗುವಂತೆ ಪೆಟ್ರೋಲ್‌ ಮೇಲೆ 3 ರೂ. ಡೀಸೆಲ್‌ ಮೇಲೆ 3.50 ಪೈಸೆ ದರ ಹೆಚ್ಚಳ ಮಾಡಲಾಗಿದೆ.
3
+ ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ನಾಗರಿಕರಿಗೆ ಸರ್ಕಾರದ ಈ ಆದೇಶ ಗಾಯದ ಮೇಲೆ ಬರೆ ಎಳೆದಂತಾಗಿದೆ. ತೈಲ ಬೆಲೆ ಏರಿಕೆ ಸಹಜವಾಗಿಯೇ ಸರಕು ಸಾಗಾಣಿಕೆ ಸೇವೆಗಳ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಅಗತ್ಯ ವಸ್ತುಗಳ ಬೆಲೆ ಕೂಡ ದುಬಾರಿಯಾಗಲಿದೆ.
4
+ ದೈನಂದಿನ ಜೀವನದಲ್ಲಿ ಸಾರಿಗೆ ವೆಚ್ಚ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ. ತೈಲ ಬೆಲೆ ಏರಿಕೆಯಿಂದಾಗಿ ತರಕಾರಿ, ದಿನಸಿ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಯನ್ನೂ ಹೆಚ್ಚಿಸಲಿದೆ.ವಿಧಾನಸಭಾ ಚುನಾವಣೆಗೂ ಮೊದಲು ಪೆಟ್ರೋಲ್‌, ಡೀಸೆಲ್‌ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಕಾಂಗ್ರೆಸ್‌‍ ಪಕ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಟೀಕಿಸಿತ್ತು. ಹಾದಿಬೀದಿಯಲ್ಲಿ ಪ್ರತಿಭಟನೆ ನಡೆಸಿ ಜನಾಕ್ರೋಶವನ್ನು ಹೆಚ್ಚುವಂತೆ ಮಾಡಿತ್ತು.
5
+ ಅಧಿಕಾರಕ್ಕೆ ಬಂದ ಬಳಿಕವೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯನ್ನೇ ಮುಂದಿಟ್ಟುಕೊಂಡು ಕೇಂದ್ರದ ಮೇಲೆ ವಾಗ್ದಾಳಿ ನಡಸಲಾಗುತ್ತಿತ್ತು. ಈಗ ತಾನಾಗಿಯೇ ಮಾರಾಟ ತೆರಿಗೆಯನ್ನು ಪರಿಷ್ಕರಣೆ ಮಾಡುವ ಮೂಲಕ ಸಿಕ್ಕಿ ಹಾಕಿಕೊಂಡಂತಾಗಿದೆ.
6
+ ಜಿಎಸ್‌‍ಟಿ ವ್ಯಾಪ್ತಿಯಿಂದ ಹೊರಗಿರುವ ತೈಲ ಮಾರಾಟದಿಂದ ರಾಜ್ಯಸರ್ಕಾರಕ್ಕೆ ಕೇಂದ್ರಕ್ಕೆ ಸಮನಾಂತರವಾಗಿಯೇ ಆದಾಯ ಬರುತ್ತಿದೆ. ಪೆಟ್ರೋಲ್‌ ಮೇಲೆ ಈ ಮೊದಲಿದ್ದ ಸರಿಸುಮಾರು 26 ರಷ್ಟು ತೆರಿಗೆ ಈಗ 29.84 ಕ್ಕೆ ಹೆಚ್ಚಾಗಿದೆ. ಡೀಸೆಲ್‌ ಮೇಲಿನ ತೆರಿಗೆ ಶೇ.14.34 ರಿಂದ ಶೇ.18.44 ರಷ್ಟು ಏರಿಕೆಯಾಗಿದೆ. ಇದರಿಂದ ಸರಿಸುಮಾರು 2 ರಿಂದ 3 ಸಾವಿರ ಕೋಟಿ ರೂ.ಗಳಷ್ಟು ಆದಾಯವನ್ನು ರಾಜ್ಯಸರ್ಕಾರ ಪಡೆಯುತ್ತಿದೆ.
7
+ ಕೇಂದ್ರ ಸರ್ಕಾರ ಲೋಕಸಭಾ ಚುನಾವಣೆಗೂ ಮೊದಲು ಜನಾಕ್ರೋಶವನ್ನು ಮನಗಂಡು ಪೆಟ್ರೋಲ್‌, ಡೀಸೆಲ್‌ ದರವನ್ನು ಕಡಿಮೆ ಮಾಡಿತ್ತು. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ದರ ಪರಿಷ್ಕರಣೆ ಮಾಡಲಿದೆ ಎಂಬ ಅಂದಾಜುಗಳಿದ್ದವು. ಆದರೆ ಅದಕ್ಕೂ ಮೊದಲೇ ರಾಜ್ಯಸರ್ಕಾರ ಮಾರಾಟ ತೆರಿಗೆಯನ್ನು ಹೆಚ್ಚಿಸುವ ಮೂಲಕ ಮರ್ಮಾಘಾತ ನೀಡಿದೆ.
8
+ ಈ ಬೆಳವಣಿಗೆ ಜನರ ಸಿಟ್ಟಿಗೆ ಕಾರಣವಾಗಿದ್ದು, ರಾಜಕೀಯ ಕಾರಣಕ್ಕಾಗಿ ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತಂದು ಅದರ ಹೊರೆಯನ್ನು ಜನರ ಮೇಲೆ ಹಾಕಲಾಗುತ್ತಿದೆ ಎಂಬ ಆಕ್ರೋಶ ತೀವ್ರಗೊಂಡಿದೆ.
9
+ ಆಂತರಿಕವಾಗಿ ರಾಜ್ಯಸರ್ಕಾರ ಇದೇ ರೀತಿಯ ಜನಾಭಿಪ��ರಾಯ ರೂಢಿಯಾಗಬೇಕು ಎಂಬ ಮುಂದಾಲೋಚನೆ ಇಟ್ಟುಕೊಂಡು ತೈಲಬೆಲೆ ಪರಿಷ್ಕರಣೆ ಮಾಡಿದಂತಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬಂದಿದ್ದು, ಅದನ್ನು ಸ್ಥಗಿತಗೊಳಿಸಬೇಕು ಎಂಬ ಒತ್ತಡಗಳು ಹೆಚ್ಚಾದರೆ ರಾಜ್ಯಸರ್ಕಾರ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿಯಂತಹ ಯೋಜನೆಗಳಿಗೆ ಕಡಿವಾಣ ಹಾಕಿ ವೆಚ್ಚವನ್ನು ತಗ್ಗಿಸಲು ಮಾರ್ಗಸೂಚಿ ರೂಪಿಸಬಹುದು ಎಂಬ ಲೆಕ್ಕಾಚಾರ ಇದ್ದಂತಿದೆ.
10
+ ಪಂಚಖಾತ್ರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಈಗಾಗಲೇ ಹಣಕಾಸು ಹೊಂದಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಬೇರೆ ಅಭಿವೃದ್ಧಿ ಯೋಜನೆಗಳಿಗೆ ಸಂಪನೂಲದ ಕೊರತೆಯಿದೆ. ಅದನ್ನು ಸರಿದೂಗಿಸಲು ಪೆಟ್ರೋಲ್‌, ಡೀಸೆಲ್‌ ಮೇಲೆ ತೆರಿಗೆ ಹೆಚ್ಚಿಸುವುದಾಗಿ ತಿಳಿದುಬಂದಿದೆ.
11
+ ಸರ್ಕಾರ ರಚನೆಯಾಗುತ್ತಿದ್ದಂತೆ ಸ್ಟಾಂಪ್‌ ಡ್ಯೂಟಿ, ಅಬಕಾರಿ ಶುಲ್ಕ ಹೆಚ್ಚಿಸಲಾಗಿತ್ತು. ಹಿಂದಿನ ಸರ್ಕಾರ ಹೆಚ್ಚಿಸಿದ್ದ ವಿದ್ಯುತ್‌ ದರದ ಲಾಭವೂ ಕಾಂಗ್ರೆಸ್‌‍ ಸರ್ಕಾರಕ್ಕೆ ದೊರೆತ್ತಿತ್ತು. ಈಗ ನೇರವಾಗಿ ಪೆಟ್ರೋಲ್‌, ಡೀಸೆಲ್‌ ಮೇಲೆಯೇ ಶುಲ್ಕ ಹೆಚ್ಚಿಸಿರುವುದರಿಂದ ಮತ್ತಷ್ಟು ಆದಾಯ ನಿರೀಕ್ಷಿಸಲಾಗುತ್ತಿದೆ.
eesanje/url_46_107_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಬೃಹತ್‌ ಪ್ರೊಟೆಸ್ಟ್
2
+ ಬೆಂಗಳೂರು, ಜೂ.17-ಡೀಸೆಲ್‌ ಮತ್ತು ಪೆಟ್ರೋಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಿತು.
3
+ ರಾಜಧಾನಿ ಬೆಂಗಳೂರು, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಮೋರ್ಚಾಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.
4
+ ಕೆಲವು ಕಡೆ ಕಾರಿಗೆ ಹಗ್ಗ ಕಟ್ಟಿ ಎಳೆದರೆ ಇನ್ನು ಕೆಲವು ಕಡೆ ಎತ್ತಿನ ಗಾಡಿ ಮೆರವಣಿಗೆ, ಶವಯಾತ್ರೆ, ತೆಂಗಿನಕಾಯಿ ಚಿಪ್ಪು, ಕರಪತ್ರ ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ಸರ್ಕಾರ ಜನವಿರೋಧಿ, ರೈತ ವಿರೋಧಿ ಎಂದು ಪ್ರತಿಭಟನೆ ನಿರತರು ಕಿರಿಕಾರಿದರು.
5
+ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಉಪನಾಯಕ ಅರವಿಂದ್‌ ಬೆಲ್ಲದ್‌, ವಿಧಾನಪರಿಷತ್‌ನ ಮುಖ್ಯ ಸಚೇತಕ ಎನ್‌.ರವಿಕುಮಾರ್‌, ಮುಖಂಡರಾದ ಸಿ.ಟಿ.ರವಿ, ಭೈರತಿ ಬಸವರಾಜ್‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.
6
+ ಪ್ರತಿಭಟನೆಗೂ ಮುನ್ನ ಅಶೋಕ್‌ ನೇತೃತ್ವದಲ್ಲಿ ಫ್ರೀಡಂಪಾರ್ಕ್‌ಗೆ ಎತ್ತಿನಗಾಡಿಯಲ್ಲಿ ಆಗಮಿಸಿದರು. ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನೆ ನಿರತರು ಈ ಸರ್ಕಾರ ಆದಷ್ಟು ಬೇಗ ತೊಲಗಲಿ ಎಂದು ಕಿಡಿಕಾರಿದರು.ಮಂಡ್ಯದ ಸಂಜಯ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮೊದಲು ಬಾಯಿ ಬಾಯಿ ಬಡಿದುಕೊಂಡು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ಬೊಕ್ಕಸವನ್ನು ದಿವಾಳಿ ಮಾಡಿರುವ ಕಾಂಗ್ರೆಸ್‌‍ ಸರ್ಕಾರ ಆದಷ್ಟು ಬೇಗ ಮನೆಗೆ ಹೋಗಲಿ ಎಂದು ವಾಗ್ದಾಳಿ ನಡೆಸಿದರು.
7
+ ಇದೇ ರೀತಿ ದಕ್ಷಿಣಕನ್ನಡದಲ್ಲಿ ಅಣುಕು ಶವಯಾತ್ರೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದ ಸರ್ಕಾರ ಜನರ ಜೇಬಿಗೆ ದರದ ಬರೆಯನ್ನು ಎಳೆದಿದೆ. ಬೇರೆ ರಾಜ್ಯಗಳಲ್ಲಿ ಅಷ್ಟಿತ್ತು, ಇಷ್ಟಿತ್ತು ಎನ್ನುವ ಬದಲು ಮೊದಲು ನೀವು ಕಡಿಮೆ ಮಾಡಿ ಎಂದು ಸವಾಲು ಹಾಕಿದರು.
8
+ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನೆ ನಡೆಸಿದ ಬಿಜೆಪಿಯವರು ದ್ವಿಚಕ್ರ ವಾಹನಗಳನ್ನು ತಳ್ಳಿಕೊಂಡೇ ಬಂದಿದ್ದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಅನಿಲ್‌ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
9
+ ತುಮಕೂರಿನಲ್ಲಿ ಭದ್ರಾ ವೃತ್ತದಿಂದ ಜಿಲ್ಲಾ���ಿಕಾರಿಗಳ ಕಚೇರಿವರೆಗೆ ಶಾಸಕ ಜ್ಯೋತಿ ಗಣೇಶ್‌ ನೇತೃತ್ವದಲ್ಲಿ ಭದ್ರಮ ವೃತ್ತದಿಂದ ಕನಕ ವೃತ್ತದವರೆಗೆ ಪ್ರತಿಭಟನಾ ಮೆರಣಿವಣಿಗೆ ನಡೆಸಲಾಯಿತು. ಶಾಸಕ ಜ್ಯೋತಿ ಗಣೇಶ್‌ ಪ್ರತಿಭಟನೆಗೆ ಸೈಕಲ್‌ ಏರಿ ಬಂದಿದ್ದು, ವಿಶೇಷವಾಗಿತ್ತು. ಹೀಗೆ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸಿಡಿದೆದ್ದಿರುವ ಬಿಜೆಪಿ ಮೊದಲ ಬಾರಿಗೆ ಬೃಹತ್‌ ಪ್ರತಿಭಟನೆಯನ್ನು ನಡೆಸಿದೆ.
eesanje/url_46_107_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಜನತೆಗೆ ರಿಯಲ್‌ ಸ್ಟಾರ್‌ ಉಪೇಂದ್ರ ಮನವಿ
2
+ ಬೆಂಗಳೂರು,ಜೂ.17-ಕನ್ನಡಕ ಚಿತ್ರರಂಗವನ್ನೇ ದಂಗುಬಡಿಸಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ರಿಯಲ್‌ ಸ್ಟಾರ್‌ ಉಪೇಂದ್ರ ಮಧ್ಯಪ್ರವೇಶ ಮಾಡಿದ್ದು, ವಿಚಾರಣೆಗೆ ವಿಡಿಯೋ ಹಾಗೂ ಸಾಕ್ಷಿಗಳನ್ನು ಹಂಚಿಕೊಳ್ಳಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ.
3
+ ಭಾನುವಾರವಷ್ಟೇ ಮತ್ತೋರ್ವ ನಟ ಕಿಚ್ಚ ಸುದೀಪ ಅವರು ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕೆಂದು ಹೇಳಿದ ಬೆನ್ನಲ್ಲೇ ಇದೀಗ ಉಪೇಂದ್ರ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣ ಇನ್‌ಸ್ಟ್ರಾಗ್ರಾಂನಲ್ಲಿ ಸುದೀರ್ಘವಾದ ಪೋಸ್ಟ್‌ ಮಾಡಿರುವ ಉಪೇಂದ್ರ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರದರ್ಶಕ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
4
+ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್‌ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈಪ್ರೊಫೈಲ್‌ ಕೇಸ್‌‍ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ.
5
+ (@)
6
+ ರೇಣುಕಾಸ್ವಾಮಿ ಕುಟುಂಬದಲ್ಲಿ ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್‌ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ.
7
+ ಏಕೆಂದರೆ ಯಾವುದೇ ಕೇಸ್‌‍ ಆದರೂ ಆ ಕೇಸ್‌‍ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್‌ ಮತ್ತು ಲೈವ್‌ ಸ್ಟ್ರೀಮಿಂಗ್‌ ಮಾಡಬಹುದು ) ಎಂದು ಹೇಳಿದ್ದಾರೆ.
8
+ ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್‌‍ ಆಗಿದ್ದರೆ ಆ ಕೇಸ್‌‍ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.
9
+ ಆಗ ರೇಣುಕಾಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್‌ ಅಭಿಮಾನಿಗಳಿಗೆ ಮನಸಿನಲ್ಲಿ ಪೋಲೀಸ್‌‍ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ.
10
+ ಸುದೀಪ್‌ ಮಾತನಾಡಿದ್ದೇನು?:ನಟ ಕಿಚ್ಚ ಸುದೀಪ್‌ ��ವರು ರೇಣುಕಾಸ್ವಾಮಿ ಕೊಲೆ ಬಗ್ಗೆ ಮಾತನಾಡಿದ್ದು, ರೇಣುಕಾಸ್ವಾಮಿ ಕೊಲೆಗೆ ನ್ಯಾಯ ಸಿಗಬೇಕು. ಹುಟ್ಟುವ ಮಗುವಿಗೆ ಜೀವನ ಸಿಗಬೇಕು. ಚಿತ್ರರಂಗಕ್ಕೆ ಕಪ್ಪುಚುಕ್ಕೆ ಬರುವುದು ಬೇಡ. ನಾನು ಯಾರ ಪರ ವಿರೋಧವೂ ಮಾತನಾಡೋದುವುದಿಲ್ಲ. ಒಬ್ಬರಿಂದ ಚಿತ್ರರಂಗ ಇಲ್ಲ, ಎಲ್ಲರಿಂದ ಚಿತ್ರರಂಗ ಎಂದು ಹೇಳಿಕೆ ನೀಡಿದ್ದಾರೆ. ಇನ್ನೂ ಕೆಲ ಕಲಾವಿದರು ತನಿಖೆ ನಡೆಯಲಿ ಎಂದು ಹೇಳಿದ್ದಾರೆ.
eesanje/url_46_107_4.txt ADDED
@@ -0,0 +1,7 @@
 
 
 
 
 
 
 
 
1
+ 10 ದಿನ ಕಳೆದರೂ ಪತ್ತೆಯಾಗಿಲ್ಲ ರೇಣುಕಾಸ್ವಾಮಿ ಮೊಬೈಲ್‌, ರಾಜಕಾಲುವೆಯಲ್ಲಿ ಹುಡುಕಾಟ
2
+ ಬೆಂಗಳೂರು, ಜೂ.17-ಚಿತ್ರ ನಟ ದರ್ಶನ್‌ ಗ್ಯಾಂಗ್‌ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಯ ಮೊಬೈಲ್‌ 10 ದಿನಗಳು ಕಳೆದರೂ ಪತ್ತೆಯಾಗಿಲ್ಲ. ಸುಮನಹಳ್ಳಿಯ ಮೋರಿಗೆ ಮೊಬೈಲ್‌ ಬಿಸಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಪೊಲೀಸರು ರಾಜಕಾಲುವೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.
3
+ ರೇಣುಕಾಸ್ವಾಮಿ ಅವರನ್ನು ಜೂ.8ರಂದು ಚಿತ್ರದುರ್ಗದಿಂದ ನಗರಕ್ಕೆ ಅಪಹರಿಸಿಕೊಂಡು ಕರೆ ತಂದಿದ್ದರು. ಅಂದು ಬೆಳಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಮಧ್ಯಾಹ್ನದ ವೇಳೆಗೆ ಆರ್‌ಆರ್‌ ನಗರದಲ್ಲಿ ಮತ್ತೆ ಮೊಬೈಲ್‌ ಸ್ವಿಚ್‌ ಆನ್‌ ಮಾಡಲಾಗಿದೆ. ಸಂಜೆ ವೇಳೆಗೆ ಮತ್ತೆ ಮೊಬೈಲ್‌ ಸ್ವಿಚ್‌ ಆಗಿದೆ.
4
+ ಅದೇ ದಿನ ಶೆಡ್‌ಗೆ ಬಂದ ತಕ್ಷಣ ಆತನ ಮೊಬೈಲ್‌ ಕಿತ್ತುಕೊಂಡು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿ ಹಾಕಿ ಮನಸೋ ಇಚ್ಚೆ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ನಂತರ ಶವವನ್ನು ಸುಮನಹಳ್ಳಿಯ ರಾಜಕಾಲುವೆಗೆ ಎಸೆದಿದ್ದು, ಮೃತದೇಹ ಪತ್ತೆಯಾದ ಮಾರನೇ ದಿನದಿಂದಲೂ ರೇಣುಕಾಸ್ವಾಮಿ ಮೊಬೈಲ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
5
+ ರೇಣುಕಾಸ್ವಾಮಿ ತನ್ನ ಮೊಬೈಲ್‌ನಿಂದ ಪವಿತ್ರಾ ಗೌಡಗೆ ಮೆಸೆಜ್‌ ಮಾಡಿರುವುದು ಹಾಗೂ ವಿಡಿಯೋ ಕಳಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಅಲ್ಲದೆ, ಪವಿತ್ರಾಗೌಡ ಸಹ ಆತನಿಗೆ ರಿಪ್ಲೈ ಮಾಡಿರುವ ಬಗ್ಗೆ ಮಾಹಿತಿ ಕಲೆಹಾಕಬಹುದಾಗಿದೆ. ಹಾಗಾಗಿ ಮೊಬೈಲ್‌ ದೊರೆತರೆ ಅದರಲ್ಲಿರುವ ಸಾಕ್ಷ್ಯಗಳನ್ನು ಸಂಗ್ರಹಿಸಲು ಪೊಲೀಸರಿಗೆ ನೆರವಾಗಲಿದೆ.
6
+ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ನಂತರ ಆರೋಪಿಗಳು ಆತನ ಮೊಬೈಲ್‌ನಿಂದ ಸಿಮ್‌ ಬೇರ್ಪಡಿಸಿ ಮುರಿದು ಮೊಬೈಲ್‌ ಹಾಗೂ ಸಿಮ್‌ನ್ನು ಬೇರೆ ಬೇರೆ ಕಡೆ ಬಿಸಾಡಿದ್ದಾರೆ ಎಂಬುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
7
+ ಘಟನೆ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳದಲ್ಲಿ ಹಾಗೂ ಮೃತದೇಹ ದೊರೆತ ಸ್ಥಳ ಮಹಜರು ಮಾಡಿರುವ ಪೊಲೀಸರು ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.ಅಲ್ಲದೆ, ನಟ ದರ್ಶನ್‌ ಹಾಗೂ ಪವಿತ್ರಾಗೌಡ ಶೆಡ್‌ಗೆ ಬಂದಿದ್ದಾಗ ಧರಿಸಿದಂತಹ ಬಟ್ಟೆಗಳು ಹಾಗೂ ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ.ಒಟ್ಟಾರೆ ರೇಣುಕಾಸ್ವಾಮಿ ಮೊಬೈಲ್‌ ಪತ್ತೆಯಾದರೆ ಇನ್ನಷ್ಟು ಸಾಕ್ಷ್ಯಗಳು ಲಭ್ಯವಾಗಲಿದ್ದು, ತನಿಖೆಗೆ ನೆರವಾಗಲಿದೆ.
eesanje/url_46_107_5.txt ADDED
@@ -0,0 +1,7 @@
 
 
 
 
 
 
 
 
1
+ ಪೋಕ್ಸೊ ಪ್ರಕರಣ : ಸಿಐಡಿ ತನಿಖಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಬಿಎಸ್ವೈ
2
+ ಬೆಂಗಳೂರು,ಜೂ.17-ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಸಿಐಡಿ ತನಿಖಾಧಿಕಾರಿಗಳ ಎದುರು ಇಂದು ವಿಚಾರಣೆಗೆ ಹಾಜರಾದರು.ಇಂದು ವಿಚಾರಣೆಗೆ ಹಾಜರಾದ ಯಡಿಯೂರಪ್ಪ ಅವರಿಗೆ ತನಿಖಾಧಿಕಾರಿಗಳು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದಾರೆ.
3
+ ದೂರುದಾರರಾಗಿದ್ದ ತಾಯಿ ಮತ್ತು ಅವರ ಮಗಳು ನಿಮ ಬಳಿ ಯಾವಾಗ ಬಂದಿದ್ದರು?, ಏನು ಸಹಾಯ ಕೇಳಿಕೊಂಡು ಬಂದಿದ್ದರು?, ಅಂದು ಏನು ಘಟನೆ ನಡೆಯಿತು? ಎಂಬಿತ್ಯಾದಿ ಪ್ರಶ್ನೆಗಳನ್ನು ಅಧಿಕಾರಿಗಳು ಕೇಳಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
4
+ ಫೆಬ್ರವರಿ 2 ರಂದು ನಡೆದಿದೆ ಎನ್ನಲಾದ ಘಟನೆ ಬಗ್ಗೆ ಅಪ್ರಾಪ್ತ ಬಾಲಕಿಯ ತಾಯಿ ಸದಾಶಿವನಗರ ಪೊಲೀಸ್‌‍ ಠಾಣೆಯಲ್ಲಿ ಯಡಿಯೂರಪ್ಪನವರ ವಿರುದ್ಧ ದೂರು ಸಲ್ಲಿಸಿದ್ದರು.ದೂರು ಆಧರಿಸಿ ಪೋಕ್ಸೊ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಪ್ರಕರಣವನ್ನು ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು.
5
+ ದೂರು ನೀಡಿದ್ದ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರನ್ನು ವಿಚಾರಣೆ ನಡೆಸಿದ್ದ ಸಿಐಡಿ ಧ್ವನಿ ಮಾದರಿಯನ್ನುಸಂಗ್ರಹಿಸಿ ಜೂನ್‌ 12 ರಂದು ವಿಚಾರಣೆಗೆ ಹಾಜರಾಗುವಂತೆ ಎರಡನೇ ಬಾರಿ ನೋಟಿಸ್‌‍ ನೀಡಿದ್ದರು, ಯಡಿಯೂರಪ್ಪರವರು ವಿಚಾರಣೆಗೆ ಗೈರು ಆಗಿದ್ದರು. ಜೂನ್‌ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ಸಿಐಡಿಗೆ ಪತ್ರ ಬರೆದು ಮನವಿ ಮಾಡಿದ್ದರು.
6
+ ಜೂನ್‌ 13 ರಂದು ಯಡಿಯೂರಪ್ಪ ವಿರುದ್ಧ ಸೆಷನ್‌ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್‌ ಜಾರಿ ಮಾಡಿತ್ತು. ಅವರ ಬಂಧನಕ್ಕೆ ಸಿಐಡಿ ಶೋಧ ಆರಂಭಿಸಿತ್ತು. ಪ್ರಕರಣವನ್ನು ರದ್ದು ಮಾಡುವಂತೆ ಹಾಗೂ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಬಿಎಸ್‌‍ವೈರವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
7
+ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸಿಐಡಿಗೆ ಸೂಚನೆ ನೀಡಿತ್ತು ಹಾಗೂ ಜೂನ್‌ 17 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಯಡಿಯೂರಪ್ಪರವರು ಸಿಐಡಿ ಎದುರು ವಿಚಾರಣೆಗೆ ಹಾಜರಾದರು.
eesanje/url_46_107_6.txt ADDED
@@ -0,0 +1,6 @@
 
 
 
 
 
 
 
1
+ ಬಕ್ರೀದ್‌ ಹಬ್ಬ : ಮುಸ್ಲಿಂ ಬಾಂಧವರ ಜೊತೆ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ
2
+ ಬೆಂಗಳೂರು,ಜೂ.17-ಬಕ್ರೀದ್‌ ಹಬ್ಬದ ಅಂಗವಾಗಿ ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.
3
+ ಸಚಿವ ಜಮೀರ್‌ ಅಹಮದ್‌ ಖಾನ್‌ ಹಾಗೂ ಧಾರ್ಮಿಕ ಮುಖಂಡರು ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿ ಅಮಾಮ್‌ ಹಾಗೂ ಶಾಲು ಹಾಕಿ ಸನಾನಿಸಿದರು. ಈ ವೇಳೆ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಮಕ್ಕಳೊಂದಿಗೆ ಮುಖ್ಯಮಂತ್ರಿ ಫೋಟೊಗೆ ಫೋಸ್‌‍ ನೀಡಿದರು.
4
+ ಪ್ರಾರ್ಥನೆ ಬಳಿಕ ಮಾತನಾಡಿದ ಸಿದ್ದರಾಮಯ್ಯನವರು ಮುಸ್ಲಿಂ ಹಾಗೂ ಎಲ್ಲರಿಗೂ ಬಕ್ರೀದ್‌ ಶುಭಾಶಯಗಳನ್ನು ಕೋರಿದರು. ಎಲ್ಲರೂ ಅಣ್ಣ-ತಮಂದಿರಂತೆ ಬದುಕಿ ಬಾಳಬೇಕು. ಪ್ರೀತಿ ವಿಶ್ವಾಸದಿಂದ ಬದುಕುವ ಅಗತ್ಯವಿದೆ. ದೇಶದಲ್ಲಿ ಬಹುತ್ವದ ಸಂಸ್ಕೃತಿ ಇದೆ. ಇಲ್ಲಿ ವಿವಿಧ ಧರ್ಮ, ಜಾತಿ, ಭಾಷೆ, ಪ್ರಾಂತ್ಯದ ಜನ ವಾಸಿಸುತ್ತಿದ್ದಾರೆ. ಮನುಷ್ಯತ್ವ ಎಲ್ಲದಕ್ಕಿಂತಲೂ ದೊಡ್ಡದು.
5
+ ಪರಸ್ಪರ ಪ್ರೀತಿ ಸಹಿಷ್ಣತೆಯಿಂದ ಬದುಕಬೇಕು. ಮತ್ತೊಂದು ಜಾತಿ ಹಾಗೂ ಧರ್ಮವನ್ನು ಪ್ರೀತಿಸುವ, ಸಹಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.ನಮ ಸರ್ಕಾರ ಸರ್ವಧರ್ಮದಲ್ಲಿ ನಂಬಿಕೆ ಇಟ್ಟಿದ್ದು, ಸಂವಿಧಾನದ ಆಶಯದಂತೆ ನಡೆದುಕೊಳ್ಳುತ್ತದೆ. ಪ್ರತಿಯೊಬ್ಬರ ನಂಬಿಕೆ ಹಾಗೂ ಧರ್ಮಗಳನ್ನು ತಾರತಮ್ಯ ಇಲ್ಲದಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿರುವ ಎಲ್ಲಾ ಧರ್ಮಗಳ 7 ಕೋಟಿ ಜನರಿಗೂ ರಕ್ಷಣೆ ನೀಡುವುದು ನಮ ಜವಾಬ್ದಾರಿ ಮತ್ತು ಬದ್ಧತೆ ಎಂದರು.
6
+ ಅಲ್ಪಸಂಖ್ಯಾತರು ಆತಂಕ ಮತ್ತು ಭಯ ಬೀಳುವ ಅಗತ್ಯವಿಲ್ಲ. ಅಲ್ಪಸಂಖ್ಯಾತರು ಹಾಗೂ ಬಹುಸಂಖ್ಯಾತರಿಗೆ ಒಂದೇ ರೀತಿಯ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಮಳೆ, ಬೆಳೆ ಹೆಚ್ಚಾಗಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಅವರು ಹಾರೈಸಿದರು.
eesanje/url_46_107_7.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಅಭಿವೃದ್ಧಿ ಕಾರ್ಯಗಳಿಗಾಗಿ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಮಾಡಲಾಗಿದೆ : ಪರಮೇಶ್ವರ್‌ ಸಮರ್ಥನೆ
2
+ ಬೆಂಗಳೂರು,ಜೂ.17-ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅಭಿವೃದ್ಧಿ ಕಾರ್ಯಗಳಿಗೆ ಸಂಪನೂಲ ಕ್ರೂಢೀಕರಣ ಅನಿವಾರ್ಯ. ಹಾಗಾಗಿ ತೈಲಬೆಲೆ ಹೆಚ್ಚಿಸಿದ್ದೇವೆ. ಇದರಿಂದ ಸಹಜವಾಗಿ ಅಡ್ಡಪರಿಣಾಮ ಆಗೇ ಆಗುತ್ತದೆ ಎಂದು ವಾದಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ದೇಶದಲ್ಲಿ 14 ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಹೆಚ್ಚಿಸಿದೆ. ಆಗ ಪ್ರತೀ ಬ್ಯಾರೆಲ್‌ ಬೆಲೆ ಕಡಿಮೆ ಇತ್ತು. ನಾವು ದರ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದೆವು. ಬಿಜೆಪಿಯವರು ಬೆಲೆ ಇಳಿಸಿರಲಿಲ್ಲ ಎಂದರು.
4
+ ನೆರೆರಾಜ್ಯಗಳಾದ ತಮಿಳುನಾಡು, ಕೇರಳ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ನಮಲ್ಲಿನ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದೆ. ಮಾರಾಟ ತೆರಿಗೆ ಹೆಚ್ಚಿಸಬೇಕೆಂಬ ಪ್ರಸ್ತಾಪ ಬಹಳ ವರ್ಷಗಳಿಂದಲೂ ಇತ್ತು. ಆದರೆ ಕ್ರಮ ಕೈಗೊಂಡಿರಲಿಲ್ಲ. ಈಗ ಇಷ್ಟು ಪ್ರಮಾಣದ ಹೆಚ್ಚಳದ ನಂತರವೂ ನಮಲ್ಲಿ ನೆರೆರಾಜ್ಯಕ್ಕಿಂತಲೂ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದೆ. ಹೀಗಾಗಿ ಜನರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.
5
+ ರಾಜ್ಯದಲ್ಲಿ ಯೋಜನೆಗಳು ಜಾರಿಯಾಗಬೇಕು. ವಿವಿಧ ಅಭಿವೃದ್ಧಿ ಕೆಲಸಗಳಾಗಬೇಕು. ಇದಕ್ಕೆಲ್ಲಾ ಸಂಪನೂಲ ಕ್ರೂಢೀಕರಣಗೊಳ್ಳಬೇಕಿದೆ. ಗ್ಯಾರಂಟಿ ಯೋಜನೆಗಳಿಗಾಗಿ ದರ ಹೆಚ್ಚಿಸಲಾಗಿದೆ ಎಂಬ ವ್ಯಾಖ್ಯಾನ ಸರಿಯಲ್ಲ ಎಂದರು.
6
+ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದರೆ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಕಡಿಮೆ ಮಾಡಲಾಗುವುದು ಎಂದು ಹೇಳಿದ್ದರು. ಈಗ ವ್ಯತಿರಿಕ್ತವಾಗಿ ದರ ಹೆಚ್ಚಿಸಲಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ನಾವು ಯಾವುದೋ ಮಾತುಗಳನ್ನು ಹೇಳಿದ್ದರೆ ಅದೇ ಶಾಶ್ವತವಾಗಿ ನಿಲ್ಲುವುದಿಲ್ಲ.
7
+ ಸಂದರ್ಭಾನುಸಾರ ಪರಿಸ್ಥಿತಿಗನುಗುಣವಾಗಿ ಆಡಳಿತ ನಡೆಸಬೇಕಿದೆ ಎಂದು ಸ್ಪಷ್ಟನೆ ನೀಡಿದರು.ದರ ಏರಿಕೆಯನ್ನು ಮನಸ್ಸಿಗೆ ಬಂದ ಹಾಗೆ ಸುಮನೆ ಹೆಚ್ಚಿಸಿಲ್ಲ. ಯಾವ ಕಾರಣಕ್ಕೆ ಹೆಚ್ಚಳ ಆಗಿದೆ ಎಂಬುದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು. ಈ ಸಂದರ್ಭಕ್ಕೆ ಸಂಪನೂಲ ಕ್ರೂಢೀಕರಣ ಅಗತ್ಯವಿದೆ. ನಾವು ಈಗಲೂ ನೆರೆರಾಜ್ಯಗಳಿಗೆ ಸರಿಸಮನಾದ ದರ ಪರಿಷ್ಕರಣೆ ಮಾಡಲಾಗಿಲ್ಲ. ಬಿಜೆಪಿಯವರು ಹಳೆಯದನ್ನು ನೆನಪಿಸಿಕೊಳ್ಳಬೇಕು ಎಂದರು.
8
+ ತೈಲಬೆಲೆ ಏರಿಕೆಯಿಂದಾಗಿ ಸಹಜವಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ. ಇದನ್ನು ಸ್ಪಿನ್‌ ಆಫ್‌ ಎಫೆಕ್ಟ್‌ ಎಂದು ಕರೆಯಲಾಗುತ್ತದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಾದಾಗ ಸಾರಿಗೆ, ಆಟೋ, ಬಸ್‌‍ ಪ್ರಯಾಣ ದರ ಎ��್ಲವೂ ಹೆಚ್ಚಾಗುತ್ತದೆ. ಹೆಚ್ಚಾಗಲೇಬೇಕು. ಈ ಹಿಂದೆಯೂ ಇದೇ ಆಗಿತ್ತು ಎಂದಿದ್ದಾರೆ.
9
+ ನಟ ದರ್ಶನ್‌ ಪ್ರಕರಣದಲ್ಲಿ ಯಾವುದೇ ಮೃದುಧೋರಣೆ ತೋರದೆ ಮುಲಾಜಿಲ್ಲದೆ ತನಿಖೆ ನಡೆಸಲಾಗುತ್ತಿದೆ. ಮೃತಪಟ್ಟ ವ್ಯಕ್ತಿಗೆ ಕರೆಂಟ್‌ ಶಾಕ್‌ ನೀಡಲಾಗಿದೆ ಎಂಬುದು ಸೇರಿದಂತೆ ನಾನಾ ರೀತಿಯ ವದಂತಿಗಳಿವೆ. ತನಿಖೆ ಪೂರ್ಣಗೊಳ್ಳುವವರೆಗೂ ಸಾರ್ವಜನಿಕವಾಗಿ ಯಾವುದೇ ವಿಚಾರಗಳು ಬಹಿರಂಗಗೊಳ್ಳುವುದಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ವರದಿ ಬರುತ್ತದೆ. ನ್ಯಾಯಾಲಯ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
10
+ ಜಿಲ್ಲಾಪಂಚಾಯತ್‌, ತಾಲ್ಲೂಕು ಪಂಚಾಯತ್‌, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ನಡೆಸಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಹಜವಾಗಿಯೇ ಮೀಸಲಾತಿ ನಿಗದಿ ಸೇರಿದಂತೆ ವಿವಿಧ ಸಿದ್ಧತೆಗಳನ್ನು ನಡೆಸಲಾಗುತ್ತದೆ. ಮೀಸಲಾತಿಯಿಂದ ಅನ್ಯಾಯವಾಗಿದೆ ಎಂದು ಯಾರೂ ಕೋರ್ಟ್‌ಗೆ ಹೋಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದರು.
11
+ ಮಧುಗಿರಿಯ ಚಿನ್ನೇನಹಳ್ಳಿ ಕಲುಷಿತ ನೀರಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ತಪ್ಪಿತಸ್ಥರು ಎಂದು ಕಂಡುಬಂದವರ ವಿರುದ್ಧ ಕ್ರಮ ಜರುಗಿಸಲಾಗಿದೆ, ತನಿಖೆ ಮುಂದುವರೆದಿದೆ. ಹಿರಿಯ ಅಧಿಕಾರಿಗಳ ಲೋಪ ಕಂಡುಬಂದರೆ ಜಿಲ್ಲಾಧಿಕಾರಿ, ಸಿಇಒ ಸೇರಿದಂತೆ ಮತ್ತಿತರರನ್ನು ಹೊಣೆ ಮಾಡಲಾಗುವುದು ಎಂದು ಹೇಳಿದರು.
eesanje/url_46_107_8.txt ADDED
@@ -0,0 +1,5 @@
 
 
 
 
 
 
1
+ ಮುಂಗಾರು ದುರ್ಬಲಗೊಳ್ಳುತ್ತಿದ್ದಂತೆ ಮತ್ತೆ ಏರಿಕೆಯಾಗುತ್ತಿದೆ ತಾಪಮಾನ
2
+ ಬೆಂಗಳೂರು,ಜೂ.17-ನೈರುತ್ಯ ಮುಂಗಾರು ದುರ್ಬಲಗೊಂಡ ಪರಿಣಾಮ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.ಕಳೆದ ವಾರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಒಂದು ಡಿಗ್ರಿ ಸೆಂಟಿಗ್ರೇಡ್‌ನಷ್ಟು ಹೆಚ್ಚಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್‌‍.ಪಾಟೀಲ್‌ ತಿಳಿಸಿದ್ದಾರೆ.
3
+ ಬೆಂಗಳೂರಿನಲ್ಲಿ ಕನಿಷ್ಟ ತಾಪಮಾನ 21 ಡಿ.ಸೆಂ. ನಷ್ಟಿದ್ದು, ಗರಿಷ್ಠ ತಾಪಮಾನ 31 ಡಿ.ಸೆಂ.ವರೆಗೆ ಇರಲಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿಗಿಂತ ಕಡಿಮೆ ಇರುತ್ತಿತ್ತು. ಅಂದರೆ 27 ರಿಂದ 29 ಡಿ.ಸೆಂ. ವರೆಗೂ ದಾಖಲಾಗುತ್ತಿತ್ತು ಎಂದಿದ್ದಾರೆ.
4
+ ಮುಂಗಾರು ದುರ್ಬಲಗೊಂಡಿರುವುದರಿಂದ ವಾತಾವರಣದಲ್ಲಿ ಮಳೆ ತರುವಂತಹ ಯಾವುದೇ ಸನ್ನಿವೇಶಗಳು ಸೃಷ್ಟಿಯಾಗಿಲ್ಲ. ಆದರೆ ನೈರುತ್ಯ ಮತ್ತು ಪಶ್ಚಿಮದ ಕಡೆಯಿಂದ ಬೀಸುವ ತಂಪಾದ ಗಾಳಿಯ ಪರಿಣಾಮದಿಂದ ರಾಜ್ಯದ ಕೆಲವೆಡೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿಲ್ಲ.
5
+ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರ ಮಳೆಯನ್ನು ನಿರೀಕ್ಷಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
eesanje/url_46_107_9.txt ADDED
@@ -0,0 +1,7 @@
 
 
 
 
 
 
 
 
1
+ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ನಿರ್ದೇಶನ
2
+ ಬೆಂಗಳೂರು,ಜೂ.17-ವಿಶ್ವವಿದ್ಯಾಲಯಗಳು ಸ್ವಾಯತ್ತ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ನಿರ್ದೇಶನ ನೀಡಿದೆ.
3
+ ಗ್ರೂಪ್‌ ಡಿ ಮತ್ತು ಸಮಾನಾಂತರ ಹುದ್ದೆ ಹಾಗೂ ಗ್ರೂಪ್‌ ಸಿ ವೃಂದಗಳಲ್ಲಿನ ಬ್ಯಾಕ್‌ಲಾಗ್‌ ಖಾಲಿ ಹುದ್ದೆ ಸೇರಿದಂತೆ ಯಾವುದೇ ಖಾಲಿ ಹುದ್ದೆಯನ್ನು ಆಯಾ ವರ್ಗಗಳಿಗೆ ಮೀಸಲಾದ ಅಭ್ಯರ್ಥಿಗಳಿಂದಲೇ ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
4
+ ಆದರೆ ಬೆರಳಚ್ಚುಗಾರರು, ದತ್ತಾಂಶ ನಮೂದು ಸಹಾಯಕರು, ವಾಹನ ಚಾಲಕರು, ಶೀಘ್ರ ಲಿಪಿಗಾರರು ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.
5
+ ಯಾವುದೇ ಹುದ್ದೆಗಳನ್ನು ಸೃಜನೆ ಮಾಡುವ ಅಥವಾ ಹೆಚ್ಚಿಸುವ ಸಂದರ್ಭದಲ್ಲಿ ಆರ್ಥಿಕ ಇಲಾಖೆಯ ಸಹಮತಿ ಪಡೆಯುವುದು ಕಡ್ಡಾಯವಾಗಿದೆ. ಆರ್ಥಿಕ ಇಲಾಖೆ ಯಾವುದೇ ಹುದ್ದೆಯನ್ನು ಮಂಜೂರು ಮಾಡದಿದ್ದರೆ ವಿಶ್ವವಿದ್ಯಾಲಯಗಳು ಮತ್ತು ಇತರ ಸ್ವಾಯತ್ತ ಸಂಸ್ಥೆಗಳ ಮಟ್ಟದಲ್ಲಿ ಸೃಜಿಸಲಾದ ಹುದ್ದೆಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ. ಆರ್ಥಿಕ ಇಲಾಖೆಯು ಇಂತಹ ಹುದ್ದೆಗಳ ಭರ್ತಿಗೆ ಸಹಮತಿ ನೀಡುವುದಿಲ್ಲ. ಅನುದಾನ ಒದಗಿಸಲು ಕ್ರಮ ವಹಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
6
+ ಆರ್ಥಿಕ ಇಲಾಖೆ ಅನುಮೋದನೆ ಇಲ್ಲದ ಹುದ್ದೆಗಳ ಎದುರಾಗಿ ಉದ್ಭವಿಸುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದಿಲ್ಲ. ಆದರೂ ವಿಶ್ವವಿದ್ಯಾಲಯಗಳು ಮತ್ತು ಇತರ ಸ್ವಾಯತ್ತ ಸಂಸ್ಥೆಗಳು ಇಂತಹ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸುತ್ತಿರುವುದನ್ನು ಗಮನಿಸಲಾಗಿದೆ. ಇಂತಹ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಸಹಮತಿ ಪಡೆಯದೆ ಬ್ಯಾಕ್‌ಲಾಗ್‌ ಹುದ್ದೆಗಳೆಂದು ಗುರುತಿಸಿರುತ್ತವೆ.
7
+ ಕರ್ನಾಟಕ ಸರ್ಕಾರದ 1977 ರ ನಿಯಮಗಳ ಅನ್ವಯ ಆರ್ಥಿಕ ಇಲಾಖೆಯಿಂದ ಪೂರ್ವಾನುಮತಿ ಪಡೆಯದ ಹುದ್ದೆಗಳ ಎದುರಾಗಿ ಬ್ಯಾಕ್‌ಲಾಗ್‌ ಹುದ್ದೆ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶವಿಲ್ಲ. ಯಾವುದೇ ಹುದ್ದೆ ಸೃಜನೆಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಪೂರ್ವಾನುಮತಿ ಪಡೆಯಬೇಕಾಗಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
eesanje/url_46_108_1.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯಸರ್ಕಾರ ಜನಸಾಮಾನ್ಯರ ಮೇಲೆ ದ್ವೇಷ ರಾಜಕಾರಣ ಮಾಡುತ್ತಿದೆ : ಪ್ರಲ್ಹಾದ್‌ ಜೋಶಿ
2
+ ಹುಬ್ಬಳ್ಳಿ, ಜೂ.16-ಪೆಟೋಲ್‌ ಹಾಗೂ ಡಿಸೇಲ್‌ ಬೆಲೆ ಏರಿಕೆ ಮಾಡಿ ರಾಜ್ಯಸರ್ಕಾರ ಜನಸಾಮಾನ್ಯರ ಮೇಲೆ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಿ ಈಗ ಆರ್ಥಿಕ ಹೊರೆ ತಡೆಯಲು ಪೆಟೋಲ್‌, ಡಿಸೇಲ್‌ ಬೆಲೆ ಏರಿಕೆ ಮಾಡಿದೆ.
3
+ ದಿನನಿತ್ಯಡ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ, ಗ್ಯಾರೆಂಟಿಯಿಂದ ಉಚಿತ ಕೊಡುತ್ತೇವೆ ಎಂದು ದರ ಏರಿಕೆ ಮಾಡಿ ಜನಸಾಮಾನ್ಯರ ಜೇಬಿಗೆ ಹೊರೆಯಾಗಿದೆ ಎಂದು ಹೇಳಿದರು.ಜಾಗತಿಕ ಯುದ್ಧ, ತೀವ್ರ ಬರಗಾಲದಿಂದ ಜನ ಸಂಕಷ್ಟ ಎದರುಸುತಿದ್ದಾರೆ. ಅನೇಕ ಕಡೆ ಬೆಳೆಗಳು ಸರಿಯಾಗಿ ಬಂದಿಲ್ಲ.
4
+ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬೆಲೆ ನಿಯಂತ್ರಣಕ್ಕೆ ಮುಂದಾಯಿತು. ಸರಿಯಾದ ರೀತಿಯಲ್ಲಿ ಪೂರೈಕೆ ಇರದ ಕಾರಣ ಆಹಾರ ಧಾನ್ಯ ಸಿಗಲಿಲ್ಲ , ಈಗಲೂ ಸಿಗುತ್ತಿಲ್ಲ. ಅದು ನೈಸರ್ಗಿಕವಾಗಿ ಆಗಿದ್ದು. ಆದರೆ ಪೆಟೋಲ್‌, ಡೀಸೆಲ್‌ ಬೆಲೆ ಜಾಸ್ತಿ ಮಾಡುತ್ತಿರುವುದು ಮಾನವ ನಿರ್ಮಿತ ಎಂದರು.
5
+ ತೈಲ ಬೆಲೆ ಏರಿಕೆಯಿಂದ ಬಸ್‌‍ ದರ, ಹಾಲಿನ ದರ, ಅಕ್ಕಿ ಎಲ್ಲಾ ದರಗಳೂ ಹೆಚ್ಚಾಗುತ್ತವೆ. ಸರ್ಕಾರದ ಬಡ ವಿರೋಧ ನೀತಿ ಅನುಸರಿಸುತ್ತಿದೆ. ಗ್ಯಾರಂಟಿ, ಗ್ಯಾರಂಟಿ ಎಂದರೂ ಜನ ತಿರಸ್ಕಾರ ಮಾಡಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ. ಈಗ ದ್ವೇಷ ಸಾಧಿಸಲು ಮುಂದಾಗಿರುವ ಸರ್ಕಾರ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಹಗೆ ತೀರಿಸಿಕೊಳ್ಳುತ್ತಿದೆ ಎಂದು ಆಕ್ಷೇಪಿಸಿದರು.
6
+ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಹಿಂದೆ ಬೆಲೆ ಏರಿಕೆ ವಿರುದ್ಧ ಶವ ಯಾತ್ರೆ ಮಾಡಿದ್ದರು. ನಾವು ಕಾಂಗ್ರೆಸ್‌‍ ಸರಕಾರದ ವಿರುದ್ಧ ಉಗ್ರ ಸ್ವರೂಪದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
eesanje/url_46_108_10.txt ADDED
@@ -0,0 +1,4 @@
 
 
 
 
 
1
+ ತಡರಾತ್ರಿ ದರ್ಶನ್‌ನನ್ನು ಮನೆಗೆ ಕರೆದೊಯ್ದು ಪರಿಶೀಲನೆ ನಡೆಸಿದ ಪೊಲೀಸರು
2
+ ಬೆಂಗಳೂರು,ಜೂ.15-ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್‌ನನ್ನು ತಡರಾತ್ರಿ ಆರ್‌ಆರ್‌ನಗರದಲ್ಲಿರುವ ಆತನ ಮನೆಗೆ ಕರೆದೊಯ್ದ ಸುಮಾರು 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್‌‍ ಜೀಪಿನ್‌ ಹಿಂಬದಿ ಸೀಟಿನಲ್ಲಿ ದರ್ಶನ್‌ನನ್ನು ಕೂರಿಸಿಕೊಂಡು ಪೊಲೀಸರು ಆತನ ಮನೆಗೆ ಕರೆದೊಯ್ದಿದ್ದಾನೆ.
3
+ ಕಳೆದ ಶನಿವಾರ ರಾತ್ರಿ ಪಟ್ಟಣಗೆರೆ ಶೆಡ್‌ನಿಂದ ಮನೆಗೆ ಬಂದು ಬಿಚ್ಚಿದ ಬಟ್ಟೆ, ಬಳಸಿದ ವಸ್ತುಗಳು, ಸ್ನಾನಕ್ಕೆ ಬಳಸಿದ್ದ ಟವಲ್‌, ಸೋಪು, ಬಕೆಟ್‌ನ್ನು ವಶಕ್ಕೆ ಪಡೆದಿದ್ದಾರೆ.ಈ ಪ್ರಕರಣದಲ್ಲಿ ಒಂದು ಸಣ್ಣ ಸಾಕ್ಷಿಯೂ ಪೊಲೀಸರಿಗೆ ಪ್ರಬಲ ಅಸ್ತ್ರ. ಒಂದು ವೇಳೆ ಆರೋಪಿಗಳು ವಿಚಾರಣೆ ವೇಳೆ ಹೇಳಿದ ಹೇಳಿಕೆಗಳು ಎಲ್ಲಾದರೂ ಉಲ್ಲಾ ಆಗಬಹುದೆಂಬ ಹಿನ್ನಲೆಯಲ್ಲಿ ಸಣ್ಣ ಸಣ್ಣ ಸಾಕ್ಷ್ಯಗಳನ್ನು ಸಹ ಪೊಲೀಸರು ಸಂಗ್ರಹಿಸುತ್ತಿದ್ದಾರೆ.
4
+ ಹೊಸ ವಿಚಾರಗಳು ಬೆಳಕಿಗೆ :ಈ ಪ್ರಕರಣದಲ್ಲಿ ಒಟ್ಟು 16 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರತಿಯೊಬ್ಬರ ಹೇಳಿಕೆಯಲ್ಲಿಯೂ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಮುಂದಿನ ದಿನಗಳಲ್ಲಿ ಆರೋಪಿಗಳು ಉಲ್ಟಾ ಹೊಡೆಯಬಾರದೆಂಬ ಹಿನ್ನೆಲಯಲ್ಲಿ ಪ್ರತಿ ಹೇಳಿಕೆಗಳನ್ನು ಸಹ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಹೇಳಿರುವ ಮಾಹಿತಿಗಳು ನಟ ದರ್ಶನ್‌ಗೆ ಭವಿಷ್ಯದಲ್ಲಿ ಕಂಟಕವಾಗುವ ಸಾಧ್ಯತೆ ಇದೆ.
eesanje/url_46_108_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ ಸಚಿವ ಎಂ.ಬಿ.ಪಾಟೀಲ್‌
2
+ ಬೆಂಗಳೂರು, ಜೂ.15-ದೇಶದ ಎಲ್ಲಾ ರಾಜ್ಯಗಳಲ್ಲೂ ಕೈಗಾರಿಕೆಗಳಿಗೂ ಸಮಾನ ಆದ್ಯತೆ ನೀಡಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆಡಿರುವ ಮಾತುಗಳನ್ನು ಬೆಂಬಲಿಸಿರುವ ಸಚಿವರು ತಮ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
3
+ ಮೈಕ್ರಾನ್‌ ಕಂಪನಿ 2.70 ಬಿಲಿಯನ್‌ ಡಾಲರ್‌ ವೆಚ್ಚದಲ್ಲಿ ಗುಜರಾತಿನಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು, 5,000 ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದೆ. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಶೇಕಡಾ 50 ಮತ್ತು ಗುಜರಾತ್‌ ಸರಕಾರದಿಂದ ಶೇಕಡ 20ರಷ್ಟು ಪ್ರೋತ್ಸಾಹ ಧನವನ್ನು ಅದು ಪಡೆಯುತ್ತಿದೆ. ಅಂದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಬೊಕ್ಕಸದಿಂದ ಕಂಪನಿಗೆ 2 ಬಿಲಿಯನ್‌ ಡಾಲರ್‌ ಸಂದಾಯ ಆಗುತ್ತಿದೆ. ಇದರ ಹಿಂದಿರುವ ತರ್ಕ ಸಮರ್ಥನೀಯವಲ್ಲ ಎಂದು ಕುಮಾರಸ್ವಾಮಿ ನಿನ್ನೆ ಹೇಳಿದ್ದರು.
4
+ , . 70% , . ’ , , , “ / …://./5lS4oakDD8
5
+ ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ, ಇಷ್ಟೊಂದು ಭಾರೀ ಪ್ರಮಾಣದ ಪ್ರೋತ್ಸಾಹಕ ಧನವನ್ನು ಸರಕಾರದ ಬೊಕ್ಕಸದಿಂದಲೇ ನೀಡುತ್ತಿದ್ದರೆ ಇದನ್ನು ಸಾರ್ವಜನಿಕ ವಲಯದ ಉದ್ಯಮವೆಂದೇ ಪರಿಗಣಿಸಬಹುದು ಎಂದೂ ಹೇಳಿದ್ದಾರೆ.
6
+ ಗುಜರಾತಿನ ಸಾನಂದ್‌ ನಲ್ಲಿ ಸೆಮಿಕಂಡಕ್ಟರ್‌ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿರುವ ಅಮೆರಿಕ ಮೂಲದ ಮೈಕ್ರಾನ್‌ ಟೆಕ್ನಾಲಜಿ ಕಂಪನಿ ಸೃಷ್ಟಿಸಲಿರುವ ಪ್ರತೀ ಉದ್ಯೋಗಕ್ಕೆ ದೇಶದ ಬೊಕ್ಕಸದಿಂದ 3.20 ಕೋಟಿ ರೂ.ಗಳಷ್ಟು ಪ್ರೋತ್ಸಾಹ ಧನ ಕೊಡುತ್ತಿರುವುದು ಸರಿಯಲ್ಲ.
7
+ ಈ ಬಗ್ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿರುವುದು ಸರಿಯಾಗಿದೆ. ಇದೇ ನೀತಿ ಮುಂದುವರಿಯುವುದಾದರೆ, ದೇಶದ ಎಲ್ಲ ರಾಜ್ಯಗಳಿಗೂ ಇದೇ ರೀತಿಯ ಸಮಾನ ಸೂತ್ರ ಮತ್ತು ಅವಕಾಶ ಸಿಗಲಿ ಎಂದಿದ್ದಾರೆ.
8
+ ಕೈಗಾರಿಕಾ ಬೆಳವಣಿಗೆಗೆ ಸೂಕ್ತವಾದ ಕಾರ್ಯ ಪರಿಸರ ಸೃಷ್ಟಿಸಲು ಈ ರೀತಿಯ ಪ್ರೋತ್ಸಾಹ ಧನ ನೀಡುತ್ತಿದ್ದರೆ ಅದು ಸ್ವಾಗತಾರ್ಹ. ಇದು ವಾಸ್ತವವಾಗಿದ್ದರೆ, ಎಲ್ಲ ರಾಜ್ಯಗಳಿಗೂ ಇಂತಹ ಸಮಾನ ಅವಕಾಶ ಸಿಗಬೇಕು. ಆಗ ಮಾತ್ರ ದೇಶದೆಲ್ಲೆಡೆ ಕೈಗಾರಿಕಾ ಬೆಳವಣಿಗೆ ಕಾಣಬಹುದು ಎಂದಿದ್ದಾರೆ.
9
+ ಕೇಂದ್ರದ ಈಗಿನ ನೀತಿಯು ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತಿನ ಬಗ್ಗೆ ಮಾತ್ರ ವಿಶೇಷ ಒಲವನ್ನು ತೋರಿಸುವಂತಿದೆ. ಇದು ತಾರತಮ್ಯ ಮತ್ತು ಅಸಮಾನತೆಗೆ ದಾರಿ ಮಾಡಿಕೊಡಲಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ.
eesanje/url_46_108_12.txt ADDED
@@ -0,0 +1,8 @@
 
 
 
 
 
 
 
 
 
1
+ ರಾಜಕೀಯ ಸಂಚಲನ ಸೃಷ್ಟಿಸಿದೆ ದರ್ಶನ್‌ ಕುರಿತ ಸಿ.ಪಿ.ಯೋಗೇಶ್ವರ್‌ ಹೇಳಿಕೆ
2
+ ಬೆಂಗಳೂರು, ಜೂ.15-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ನಟ ದರ್ಶನ್‌ ಅವರನ್ನು ಕಣಕ್ಕಿಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮುಂದಾಗಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು ನೀಡಿರುವ ಹೇಳಿಕೆ ರಾಜಕೀಯವಾಗಿ ಸಂಚಲನ ಸೃಷ್ಟಿಸಿದೆ.
3
+ ಈ ಹೇಳಿಕೆಯನ್ನು ಅಲ್ಲಗಳೆಯುವ ಬದಲಾಗಿ ಕಾಂಗ್ರೆಸಿಗರೇ ಅನುಮಾನಗಳಿಗೆ ಪುಷ್ಟಿ ನೀಡುವಂತೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ಆದರೆ, ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಸಲಾಗುವುದು ಮತ್ತು ಅವರನ್ನು ಗೆಲ್ಲಿಸಲು ಶ್ರಮಿಸುವುದಾಗಿ ಹೇಳಿದ್ದರು.
4
+ ಇದಕ್ಕೆ ಪ್ರತಿಯಾಗಿ ಮಾತನಾಡಿರುವ ಸಿ.ಪಿ.ಯೋಗೇಶ್ವರ್‌, ಡಿ.ಕೆ.ಸಹೋದರರು ಕಣಕ್ಕಿಳಿಸಲು ಬಯಸಿದ್ದ ಅಚ್ಚರಿ ಅಭ್ಯರ್ಥಿ ಈಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ ಎಂದಿದ್ದಾರೆ.ಸಿ.ಪಿ.ಯೋಗೇಶ್ವರ್‌ ಅವರು ದರ್ಶನ್‌ ಅವರ ಹೆಸರು ಹೇಳದಿದ್ದರೂ ಸಹಜವಾಗಿ ಜನರ ಗಮನ ಪ್ರಸಕ್ತ ವಿದ್ಯಮಾನಗಳತ್ತ ಹೊರಳಿದೆ.
5
+ ದರ್ಶನ್‌ ಅವರು, ಕಾಂಗ್ರೆಸ್‌‍ ಅಭ್ಯರ್ಥಿಯಾಗಲು ಬಯಸಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ್‌ ತಮಗೆ ಆ ಬಗ್ಗೆ ಮಾಹಿತಿ ಇಲ್ಲ. ಆದರೆ, ಕೊಲೆ ಪ್ರಕರಣ ಬಯಲಿಗೆ ಬರುವ ಮುನ್ನ ಆ ರೀತಿಯ ಚರ್ಚೆಗಳು ನಡೆದಿದ್ದರೆ ತಪ್ಪೇನೂ ಇಲ್ಲ. ಕಾಂಗ್ರೆಸ್‌‍ನವರು ಇದೇ ರೀತಿಯ ಪ್ರಶ್ನೆಗಳನ್ನು ಕೇಳಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಕಣಕ್ಕಿಳಿಸಿದ್ದೇಕೆ? ಎಂದರೆ ಜೆಡಿಎಸ್‌‍ ಮತ್ತು ಬಿಜೆಪಿಯ ಬಳಿ ಉತ್ತರವಿದೆಯೇ? ಎಂದು ಪ್ರಶ್ನಿಸಿದ್ದಾರೆ.
6
+ ದರ್ಶನ್‌ ಅವರನ್ನು ರಕ್ಷಿಸಲು ಕಾಂಗ್ರೆಸ್‌‍ನಲ್ಲಿ ಯಾರೂ ಪ್ರಯತ್ನಿಸುತ್ತಿಲ್ಲ. ಇದು ಕೊಲೆ ಪ್ರಕರಣ. ಕೊಲೆಯಾಗಿರುವ ಕುಟುಂಬದವರು ಆರೋಪಿಗಳು ಸುಲಭವಾಗಿ ಪಾರಾಗಲು ಬಿಡುವುದಿಲ್ಲ. ವಕೀಲರಿದ್ದಾರೆ, ಕಾನೂನು ಇದೆ ಎಂದು ಹೇಳಿದ್ದಾರೆ.
7
+ ಕಾಂಗ್ರೆಸ್‌‍ ಶಾಸಕ ಪ್ರಸಾದ್‌ ಅಬ್ಬಯ್ಯ ಮಾತನಾಡಿ, ದರ್ಶನ್‌ ಅವರನ್ನು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಲು ಪ್ರಯತ್ನ ನಡೆದಿತ್ತು ಎಂಬ ರಾಜಕೀಯ ವ್ಯಾಖ್ಯಾನಗಳು ನಡೆಯುತ್ತಿವೆ. ಆದರೆ, ಆ ರೀತಿಯ ನಿರ್ಧಾರವನ್ನು ಸಮಯ ಬಂದಾಗಷ್ಟೇ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
8
+ ಕಾಂಗ್ರೆಸ್‌‍ನಲ್ಲೇ ಪ್ರಭಾವಿಗಳು ದರ್ಶನ್‌ ಅವರನ್ನು ರಕ್ಷಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂಬ ಆರೋಪಗಳು ಹಾಗೂ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ತಳುಕು ಹಾಕಿರುವುದು ಕಾವೇರಿದ ಚರ್ಚೆಗೆ ಗ್ರಾಸವಾಗಿದೆ.