CoolCoder44 commited on
Commit
ce2c5ec
·
verified ·
1 Parent(s): 8930078

dcf774d17dc392199e5be57f0b8bf61c076903d570362346a8a943372d961828

Browse files
Files changed (50) hide show
  1. eesanje/url_46_46_5.txt +14 -0
  2. eesanje/url_46_46_6.txt +11 -0
  3. eesanje/url_46_46_7.txt +13 -0
  4. eesanje/url_46_46_8.txt +6 -0
  5. eesanje/url_46_46_9.txt +8 -0
  6. eesanje/url_46_47_1.txt +4 -0
  7. eesanje/url_46_47_10.txt +6 -0
  8. eesanje/url_46_47_11.txt +8 -0
  9. eesanje/url_46_47_12.txt +14 -0
  10. eesanje/url_46_47_2.txt +7 -0
  11. eesanje/url_46_47_3.txt +6 -0
  12. eesanje/url_46_47_4.txt +17 -0
  13. eesanje/url_46_47_5.txt +10 -0
  14. eesanje/url_46_47_6.txt +6 -0
  15. eesanje/url_46_47_7.txt +6 -0
  16. eesanje/url_46_47_8.txt +5 -0
  17. eesanje/url_46_47_9.txt +10 -0
  18. eesanje/url_46_48_1.txt +8 -0
  19. eesanje/url_46_48_10.txt +8 -0
  20. eesanje/url_46_48_11.txt +5 -0
  21. eesanje/url_46_48_12.txt +9 -0
  22. eesanje/url_46_48_2.txt +5 -0
  23. eesanje/url_46_48_3.txt +12 -0
  24. eesanje/url_46_48_4.txt +10 -0
  25. eesanje/url_46_48_5.txt +5 -0
  26. eesanje/url_46_48_6.txt +8 -0
  27. eesanje/url_46_48_7.txt +7 -0
  28. eesanje/url_46_48_8.txt +4 -0
  29. eesanje/url_46_48_9.txt +13 -0
  30. eesanje/url_46_49_1.txt +7 -0
  31. eesanje/url_46_49_10.txt +7 -0
  32. eesanje/url_46_49_11.txt +11 -0
  33. eesanje/url_46_49_12.txt +7 -0
  34. eesanje/url_46_49_2.txt +11 -0
  35. eesanje/url_46_49_3.txt +8 -0
  36. eesanje/url_46_49_4.txt +8 -0
  37. eesanje/url_46_49_5.txt +6 -0
  38. eesanje/url_46_49_6.txt +6 -0
  39. eesanje/url_46_49_7.txt +5 -0
  40. eesanje/url_46_49_8.txt +5 -0
  41. eesanje/url_46_49_9.txt +5 -0
  42. eesanje/url_46_4_1.txt +11 -0
  43. eesanje/url_46_4_11.txt +13 -0
  44. eesanje/url_46_4_12.txt +12 -0
  45. eesanje/url_46_4_2.txt +7 -0
  46. eesanje/url_46_4_3.txt +7 -0
  47. eesanje/url_46_4_4.txt +12 -0
  48. eesanje/url_46_4_5.txt +7 -0
  49. eesanje/url_46_4_6.txt +14 -0
  50. eesanje/url_46_4_7.txt +13 -0
eesanje/url_46_46_5.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಪ್ರತ್ಯೇಕ ಪಾದಯಾತ್ರೆಗೆ ನನ್ನ ತಕರಾರು ಇಲ್ಲ : ವಿಜಯೇಂದ್ರ ಸ್ಪಷ್ಟನೆ
2
+ ಬೆಂಗಳೂರು,ಆ.13-ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ನನ್ನ ಕರ್ತವ್ಯ. ಆ ಕೆಲಸವನ್ನು ಸತತವಾಗಿ ಮಾಡ್ತಾ ಬಂದಿದ್ದೇನೆ. ಕೆಲವರು ಪ್ರತ್ಯೇಕ ಪಾದಯಾತ್ರೆ ನಡೆಸುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.ಇದಕ್ಕೆ ನನ್ನ ತಕರಾರು ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
3
+ ಶಿವಾಜಿನಗರದ ವಸಂತ ನಗರ ವಾರ್ಡಿನ ಬೂತ್‌ ನಂ.44ರಲ್ಲಿ ಇಂದು ಬೆಳಿಗ್ಗೆ ಹರ್‌ ಘರ್‌ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಪಾದಯಾತ್ರೆ ನಡೆಸುವುದರಿಂದ ಪಕ್ಷಕ್ಕೆ ಶಕ್ತಿ ಸಿಗುತ್ತದೆ ಎಂದರೆ ವರಿಷ್ಠರು ಅದಕ್ಕೆ ಅನುಮತಿ ಕೊಡುತ್ತಾರೆ. ಕೇಂದ್ರದ ವರಿಷ್ಠರನ್ನು ಭೇಟಿ ಮಾಡುತ್ತೇವೆ ಅಂದಿದ್ದಾರೆ, ಭೇಟಿ ಮಾಡಲು ಎಲ್ಲರಿಗೂ ಸ್ವತಂತ್ರವಿದೆ. ಕೇಂದ್ರದ ನಾಯಕರು ಅನುಮತಿ ಕೊಟ್ಟರೆ ಮಾಡಲಿ. ಏನೇ ಮಾಡಿದರೂ ಅದು ಪಕ್ಷಕ್ಕೆ ಪೂರಕವಾಗಿರಬೇಕು, ಸದುದ್ದೇಶದಿಂದ ಇರಬೇಕು ಎಂದು ಹೇಳಿದರು.
4
+ ಇನ್ನು ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತಂತೆ ಸಿ.ಪಿಯೋಗೀಶ್ವರ್‌ ತಾವು ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ. ಇದು ತಪ್ಪು ಎಂದು ನಾವು ಹೇಳಲ್ಲ. ಅವರು ಕೂಡಾ ಕ್ಷೇತ್ರದಲ್ಲಿ ಅವರದ್ದೇ ಆದ ಹಿಡಿತ ಇಟ್ಕೊಂಡಿದ್ದಾರೆ ಎಂದರು.
5
+ ಸಿ.ಪಿ.ಯೋಗೇಶ್ವರ್‌ಗೆ ಅವರಿಗೆ ಬೆಂಬಲಿಗರಿದ್ದಾರೆ, ಕ್ಷೇತ್ರದಲ್ಲಿ ಅವರದ್ದೇ ಆದ ಶಕ್ತಿ ಇದೆ. ಆದರೆ ಎರಡೂ ಪಕ್ಷಗಳೂ ಒಟ್ಟಿಗೆ ಹೋಗಬೇಕು. ಈ ಸಂದರ್ಭದಲ್ಲಿ ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂದು ಎರಡೂ ಪಕ್ಷಗಳೂ ಒಟ್ಟಿಗೆ ಕೂತು ಚರ್ಚೆ ಮಾಡುತ್ತಾರೆ ಎಂದು ತಿಳಿಸಿದರು.
6
+ ಇಷ್ಟು ಮಾತ್ರ ಸತ್ಯ, ಚನ್ನಪಟ್ಟಣ ಕ್ಷೇತ್ರ ಎಚ್‌.ಡಿ.ಕುಮಾರಸ್ವಾಮಿ ಅವರು ಗೆದ್ದಂತಹ ಕ್ಷೇತ್ರ. ದೆಹಲಿಯಲ್ಲಿ ಎರಡೂ ಪಕ್ಷದ ವರಿಷ್ಠರು ಚರ್ಚಿಸಿ ತೀರ್ಮಾನ ಮಾಡುತ್ತಾರೆ. ಅಲ್ಲೀವರೆಗೂ ಎಲ್ಲರೂ ಸಮಾಧಾನದಿಂದ ಇರಬೇಕು ಎಂದು ಮನವಿ ಮಾಡಿದರು. ಯಾರಿಗೆ ಟಿಕೆಟ್‌ ಎಂದು ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ.
7
+ ಡಾ.ಅಶ್ವಥ್‌ನಾರಾಯಣ ನೇತೃತ್ವದ ಸಮಿತಿ ಅಭಿಪ್ರಾಯ ಪಡೆದುಕೊಂಡಿದ್ದಾರೆ. ವರದಿಯಲ್ಲಿ ಅವರು ಏನು ಕೊಟ್ಟಿದ್ದಾರೋ ಗೊತ್ತಿಲ್ಲ, ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.
8
+ ಸಿಬಿಐಗೆ ವಹಿಸಿ:ಮುಡಾ ಪ್ರಕರಣವನ್ನು ರಾಜ್ಯ ಸರ್ಕಾರ ವಿಳಂಬ ಮಾಡದೆ ಸಿಬಿಐಗೆ ವಹಿಸಬೇಕು. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
9
+ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಕುಟುಂಬದವರೇ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳು ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ನಿಷ್ಪಕ್ಷಪಾತ ತನಿಖೆ ಸಿಬಿಐನಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು.
10
+ ಸರ್ಕಾರದಿಂದ ಜನೌಷಧ ಕೇಂದ್ರಗಳಿಗೆ ಬ್ರೇಕ್ ಹಾಕುವ ವಿಚಾರ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಇದು ಖಂಡನೀಯ. ರಾಜ್ಯ ಸರ್ಕಾರ ಪ್ರತಿಯೊಂದು ವಿಚಾರದಲ್ಲೂ ಸಂಘರ್ಷದ ಹಾದಿ ತುಳಿಯುತ್ತಿದೆ, ಇದು ದುರಂತ ಬಡವರಿಗೆ ಕಡಿಮೆ ದರದಲ್ಲಿ ಕೇಂದ್ರದಿಂದ ಔಷಧಗಳು ಸಿಗುತ್ತಿವೆ. ಇದು ಪ್ರಧಾನಮಂತ್ರಿಗಳ ಕನಸಿನ ಯೋಜನೆಯಾಗಿದೆ ಎಂದರು.
11
+ ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.
12
+ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು, ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನು ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದಾರೆ. ಅದಕ್ಕಾಗಿ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮಿಕೊಂಡಿದ್ದೇವೆ ಎಂದರು.
13
+ ಸಂಸದ ಪಿ.ಸಿ.ಮೋಹನ್‌, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೂತ್‌ ಸಂಖ್ಯೆ 44ರ ಅಧ್ಯಕ್ಷ ಸಾಗರ್‌, ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಅದೇರೀತಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
14
+ ಯುವಕರಿಂದ ಬೈಕ್‌ ರ್ಯಾಲಿ ಮೂಲಕ ತಿರಂಗ ಯಾತ್ರೆ ನಡೆಸಲಾಗುತ್ತಿದ್ದು, ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು. ಈಗಾಗಲೇ ಆ.11ರಿಂದ 15ರವರೆಗೆ ಸ್ವಾತಂತ್ರ್ಯ ಹೋರಾಟಗಾರರ ಸಾರಕಗಳು, ಪುತ್ಥಳಿಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ನಾಳೆ ದೇಶದ ವಿಭಜನೆಯ ಕರಾಳ ದಿನದ ನೆನಪನ್ನು ವಿಭಜನೆಯ ಸತಿ ದಿನವಾಗಿ ನೆನಪಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
eesanje/url_46_46_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮನೆಯೊಂದು ಮೂರು ಬಾಗಿಲಂತಾದ ಕರ್ನಾಟಕ ಬಿಜೆಪಿ
2
+ ಬೆಂಗಳೂರು,ಆ.13-ಮನೆಯೊಂದು ಮೂರು ಬಾಗಿಲು! ಹೌದು, ಇದು ಸದ್ಯ ರಾಜ್ಯ ಬಿಜೆಪಿಯ ಪರಿಸ್ಥಿತಿ. ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ, ಹೋರಾಟದ ಉತ್ಸಾಹ ಕಮಲ ಪಾಳಯದಲ್ಲಿ ಮೇಲ್ನೋಟಕ್ಕೆ ಕಾಣಸಿಕ್ಕರೂ, ಆಂತರಿಕವಾಗಿ ಬಿಜೆಪಿ ಒಡೆದ ಮನೆಯಾಗಿದೆ.
3
+ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಂ ಒಂದು ಕಡೆಯಾದರೆ, ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣ ಮತ್ತೊಂದು ಕಡೆ. ಇದೆಲ್ಲವನ್ನೂ ಮೀರಿ ಸಂಘ ನಿಷ್ಠ ಅಥವಾ ಹೈಕಮಾಂಡ್‌ ನಿಷ್ಠ ಬಣ ಮಗದೊಂದು ಕಡೆ.
4
+ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಯ್ಕೆ ಸಂದರ್ಭದಲ್ಲೇ ಭುಗಿಲೆದ್ದ ಅಸಮಾಧಾನ ಇನ್ನೂ ಆರಿಲ್ಲ. ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಬಹಿರಂಗವಾಗಿಯೇ ಗುಡುಗಿದ್ದರು. ಅವರಿಗೆ ಸಾಥ್‌ ನೀಡಿದವರು ವಲಸೆ ಶಾಸಕ ರಮೇಶ್‌ ಜಾರಕಿಹೊಳಿ.
5
+ ಸದ್ಯ ಈ ತಂಡ ವಿಸ್ತರಣೆಯಾಗುತ್ತಿದೆ. ಮಾಜಿ ಸಂಸದ ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ, ಶಾಸಕ ಬಿಪಿ ಹರೀಶ್‌ ಕೂಡಾ ಸೇರ್ಪಡೆಯಾಗಿದ್ದಾರೆ. ಈ ಭಿನ್ನ ರಾಗಕ್ಕೆ ವಿಧಾನಸಭೆ ಉಪ ನಾಯಕ ಅರವಿಂದ ಬೆಲ್ಲದ ಪರೋಕ್ಷ ಬೆಂಬಲ ನೀಡಿದ್ದಾರೆ.
6
+ ಸಿಎಂ ಸಿದ್ದರಾಮಯ್ಯ ವಿರುದ್ಧದ ಹೋರಾಟ ಹಾಗೂ ಪಾದಯಾತ್ರೆಯಲ್ಲಿ ಉತ್ಸಾಹದಲ್ಲಿದ್ದ ಬಿಜೆಪಿಗೆ ಒಳಬೇಗುದಿಯೇ ಬಹುದೊಡ್ಡ ಸವಾಲಾಗಿದೆ. ಪಾದಯಾತ್ರೆಯಲ್ಲಿ ಬಿ.ವೈ.ವಿಜಯೇಂದ್ರಗೆ ಒಂದಿಷ್ಟು ರಾಜಕೀಯ ಲಾಭವಾದರೂ ಅದನ್ನು ಗಟ್ಟಿಗೊಳಿಸಲು ಪಕ್ಷದಲ್ಲಿರುವ ಬಂಡಾಯಗಾರರು ಅವಕಾಶ ಕೊಡುತ್ತಿಲ್ಲ.
7
+ ಈ ಕಾರಣಕ್ಕಾಗಿಯೇ ಪಾದಯಾತ್ರೆಯ ಹಿಂದೆ ಡಿಕೆಶಿ ಸೂತ್ರಧಾರ ಎಂದೇ ಬಂಡಾಯ ಬಣ ಪ್ರಚಾರ ಮಾಡಿತ್ತು. ಇದನ್ನು ಅಲ್ಲಗಳೆಯುವುದು ವಿಜಯೇಂದ್ರಗೂ ಸವಾಲಾಗಿ ಮಾರ್ಪಟ್ಟಿತ್ತು. ಈ ನಡುವೆ ಯತ್ನಾಳ್‌ ನೇತೃತ್ವದ ಭಿನ್ನರ ಗುಂಪು ಬಳ್ಳಾರಿಗೆ ಪಾದಯಾತ್ರೆ ಹಮಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಆದರೆ ಇದಕ್ಕೆ ಹೈಕಮಾಂಡ್‌ ಅನುಮತಿ ಕೊಡುತ್ತಾ? ಇದರಲ್ಲಿ ಬಿ.ವೈ.ವಿಜಯೇಂದ್ರ ಬಣ ಭಾಗಿಯಾಗುತ್ತಾ? ಎಂಬುವುದು ಯಕ್ಷ ಪ್ರಶ್ನೆಯಾಗಿದೆ.
8
+ ಸದ್ಯ ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿರುವ ಒಂದು ಪದ ಹೊಂದಾಣಿಕೆ ರಾಜಕಾರಣ. ಹೌದು ಬಿವೈ ವಿಜಯೇಂದ್ರ ವಿರುದ್ಧ ಯತ್ನಾಳ್‌ ಬಣ ಈ ಆರೋಪವನ್ನು ಮಾಡುತ್ತಿದೆ. ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ವಿರುದ್ಧವೂ ಇದೇ ಆರೋಪವನ್ನು ಯತ್ನಾಳ್‌ ತಂಡ ಮಾಡುತ್ತಿದೆ. ಬಿವೈ ವಿಜಯೇಂದ್ರ ಅವರು ಡಿಸಿಎಂ ಡಿಕೆ ಶಿವಕುಮಾರ್‌ ಜೊತೆಗೆ ಹೊಂದಾಣಿಕೆ ರಾಜಕಾರಣ ನಡೆಸುತ್ತಿದ್ದಾರೆ ಎಂಬುವುದು ಆರೋಪವಾಗಿದೆ.
9
+ ಸದನದಲ್ಲೂ ಬಿಜೆಪಿ ಅಹೋರಾತ್ರಿ ಧರಣಿ ಸಂದರ್ಭದಲ್ಲಿ ಇದೇ ಆರೋಪವನ್ನು ಯತ್ನಾಳ್‌ ಮಾಡಿದ್ದರು. ತಮ ಒತ್ತಡಕ್ಕೆ ಮಣಿದು ಪ್ರತಿಭಟನೆ ನಡೆಸಿದ್ದಾರೆ ಎಂಬ ಅರ್ಥದಲ್ಲೂ ಹೇಳಿಕೆ ನೀಡಿದ್ದರು. ಇವೆಲ್ಲವೂ ವಿಜಯೇಂದ್ರ ಬಣಕ್ಕೆ ಮುಜುಗರ ಉಂ��ು ಮಾಡುತಿವೆ.
10
+ ಹೈಕಮಾಂಡ್‌ ನಡೆ ಏನು:ರಾಜ್ಯ ಬಿಜೆಪಿಯ ಒಳಬೇಗುದಿ ಬಿಜೆಪಿ ಹೈಕಮಾಂಡ್‌ಗೂ ತಲೆನೋವಾಗಿ ಮಾರ್ಪಟ್ಟಿದೆ. ಇದು ಹೀಗೆಯೇ ಮುಂದುವರಿದಲ್ಲಿ ಪಕ್ಷಕ್ಕೆ ದೊಡ್ಡ ರೀತಿಯಲ್ಲಿ ಡ್ಯಾಮೇಜ್‌ ಆಗಲಿದೆ. ರಾಜ್ಯದಲ್ಲಿ ಆಡಳಿತ ಸರ್ಕಾರದ ವಿರುದ್ಧ ಹೋರಾಟ ಮಾಡಲು ಬಿಜೆಪಿ ಬಳಿ ಸಾಕಷ್ಟು ಅಸ್ತ್ರಗಳಿವೆ. ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಹೈಕಮಾಂಡ್‌ ಮಧ್ಯಪ್ರವೇಶ ಮಾಡುತ್ತಾ? ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.
11
+ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರಲ್ಲಿ ಸಾಕಷ್ಟು ನಿರೀಕ್ಷೆಗಳು ಇದ್ದವು. ಆದರೆ ಎಲ್ಲರ ವಿಶ್ವಾಸ ಗಳಿಸುವಲ್ಲಿ ವಿಜಯೇಂದ್ರ ವಿಫಲವಾಗುತ್ತಿದ್ದಾರೆ. ಪಕ್ಷದಲ್ಲೇ ಕೆಲವರು ಬಹಿರಂಗವಾಗಿ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದರೆ, ಮತ್ತೆ ಕೆಲವರು ಆಂತರಿಕವಾಗಿಯೇ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ವಿಜಯೇಂದ್ರ ವಿರುದ್ಧವಾಗಿ ಅಭಿಪ್ರಾಯ ರೂಪಿಸುವಲ್ಲಿ ಅವರ ವಿರೋಧಿ ಬಣ ಸಕ್ರಿಯವಾದರೆ, ಅವರನ್ನು ಬಲವಾಗಿ ಸಮರ್ಥನೆ ಮಾಡುವವರು ಪಕ್ಷದಲ್ಲಿ ಇಲ್ಲ. ಇದು ಭವಿಷ್ಯದಲ್ಲಿ ವಿಜಯೇಂದ್ರಗೆ ಹಿನ್ನಡೆ ಆಗುವುದರಲ್ಲಿ ಸಂಶಯವಿಲ್ಲ.
eesanje/url_46_46_7.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಸ್ವಾತಂತ್ರ್ಯೋತ್ಸವ ದಿನಾಚರಣೆ ಬಂದೋಬಸ್ತ್‌ಗೆ 1583 ಅಧಿಕಾರಿ-ಸಿಬ್ಬಂದಿ ನಿಯೋಜನೆ
2
+ ಬೆಂಗಳೂರು, ಆ.13– ಫೀಲ್ಡ್ ಮಾರ್ಷಲ್‌ ಮಾಣಿಕ್‌ ಷಾ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳೂ ಸೇರಿದಂತೆ 1583 ಸಿಬ್ಬಂದಿಯನ್ನು ಬಂದೋಬಸ್ತ್‌ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್‌‍ ಆಯುಕ್ತ ಬಿ. ದಯಾನಂದ ಅವರು ತಿಳಿಸಿದರು.
3
+ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಲ್ಲಾ ವಿಭಾಗಗಳಿಂದ 10 ಮಂದಿ ಡಿಸಿಪಿಗಳು, 17 ಎಸಿಪಿಗಳು, 42 ಇನ್ಸ್ ಸಪೆಕ್ಟರ್‌ಗಳು, 112 ಮಂದಿ ಪಿಎಸ್‌‍ಐಗಳು, 62 ಎಎಸ್‌‍ಐಗಳು, 511 ಮಂದಿ ಕಾನ್‌ಸ್ಟೇಬಲ್‌ಗಳು, 72 ಮಹಿಳಾ ಸಿಬ್ಬಂದಿಗಳೊಂದಿಗೆ 129 ಮಂದಿ ಸಾದ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ 27 ಮಂದಿ ಕ್ಯಾಮೆರಾ ಸಿಬ್ಬಂದಿಗಳನ್ನು ಬಂದೋಬಸ್ತ್‌ ಕರ್ತವ್ಯಕ್ಕೆ ನೇಮಿಸಲಾಗಿದೆ ಎಂದರು.
4
+ ಸಂಚಾರ ನಿರ್ವಹಣೆಗಾಗಿ 3 ಮಂದಿ ಡಿಸಿಪಿ, 6 ಎಸಿಪಿ, 19 ಇನ್ಸ್ ಸಪೆಕ್ಟರ್‌, 32 ಸಬ್‌ಇನ್ಸ್ ಸಪೆಕ್ಟರ್‌, 111 ಮಂದಿ ಎಎಸ್‌‍ಐ, 430 ಕಾನ್‌ಸ್ಟೇಬಲ್‌ಗಳು ನಿಗಾ ವಹಿಸಲಿದ್ದಾರೆ.ಅಲ್ಲದೆ, ಮೈದಾನದ ಬಂದೋಬಸ್ತ್‌ ಕರ್ತವ್ಯಕ್ಕೆ 10 ಕೆಎಸ್‌‍ಆರ್‌ಪಿ ಮತ್ತು ಸಿಆರ್‌ ತುಕಡಿಗಳನ್ನು, ಅಗ್ನಿಶಾಮಕ ವಾಹನಗಳು, 2 ಅಂಬುಲೆನ್ಸ್ ಸ ವಾಹನಗಳು, 4 ಖಾಲಿ ವಾಹನಗಳು, ಒಂದು ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಡಿ-ಸ್ಪಾಟ್‌, 1 ಆರ್‌ಐವಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಒಂದು ಗರುಡ ಫೋರ್ಸ್‌ ಕಾಯ್ದಿರಿಸಲಾಗಿದೆ.
5
+ ಮೈದಾನದ ಸುತ್ತ ಎಲ್ಲಾ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾ ವಹಿಸಲು 100 ಸಿಸಿ ಟಿವಿ, ಕ್ಯಾಮೆರಾಗಳನ್ನು ಮತ್ತು 4 ಬ್ಯಾಗೆಜ್‌ ಸ್ಕ್ಯಾನರ್‌, 20 ಡಿಎಫ್‌ಎಂಡಿ ಮತ್ತು 40 ಹೆಚ್‌ಹೆಚ್‌ ಎಂಡಿಗಳನ್ನು ಅಳವಡಿಸಲಾಗಿರುತ್ತದೆ.ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರ ಭದ್ರತೆಯ ದೃಷ್ಟಿಯಿಂದ ಆಹ್ವಾನಿತರಿಗೆ ಪಾಸ್‌‍ಗಳನ್ನು ವಿತರಿಸಲಾಗಿದೆ.
6
+ ಗೇಟ್‌-2ರಲ್ಲಿ ಪಿಂಕ್‌ ಬಣ್ಣದ ವಿವಿಐಪಿ ಪಾಸ್‌‍ ಹೊಂದಿರುವವರಿಗೆ ಪ್ರವೇಶಿಸಿ, ಬ್ಲಾಕ್‌ 1 ಮತ್ತು 1ಎನಲ್ಲಿ ಆಸಿನರಾಗುವುದು. ಪಿಂಕ್‌ ಬಣ್ಣದ ವಿಐಪಿ ಪಾಸ್‌‍ ಹೊಂದಿರುವವರು ಗೇಟ್‌ ನಂ 2ರಲ್ಲೇ ಪ್ರವೇಶಿಸಿ ಬ್ಲಾಕ್‌ ನಂ 2 ಮತ್ತು 3ರಲ್ಲಿ ಅಸಿನರಾಗುವುದು.ಗೇಟ್‌ ನಂ 4ರಲ್ಲಿ ಬಿಳಿ ಬಣ್ಣದ ಪಾಸ್‌‍ ಹೊಂದಿರುವವರಿಗೆ ಪ್ರವೇಶವಿದ್ದು, ಅವರು ಬ್ಲಾಕ್‌ 4,5 ಮತ್ತು 6ರಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇರುತ್ತದೆ.
7
+ ಗೇಟ್‌ ನಂ 4ರಲ್ಲಿ ಮಾಧ್ಯಮದವರು ಪ್ರವೇಶಿಸಿ ಮೀಡಿಯಾ ಬಾಕ್ಸ್ಸಗೆ ತೆರೆಳುವುದು. ಗೇಟ್‌ ನಂ 5ರಲ್ಲಿ ಹಸಿರು ಬಣ್ಣದ ಪಾಸ್‌‍ ಹೊಂದಿರುವ ಸಾರ್ವಜನಿಕರಿಗೆ ಪ್ರವೇಶವಿದ್ದು, ಅವರು ಬ್ಲಾಕ್‌ ನಂ 7, 8,9ರಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.ಕಾರ್ಯಕ್ರಮದ ಭದ್ರತಾ ದೃಷ್ಟಿಯಿಂದ ಗೇಟ್‌ಗಳ ಬ��ಿ ತಪಾಸಣೆಗೆ ಒಳಪಟ್ಟು ಪೊಲೀಸರೊಂದಿಗೆ ಸಹಕರಿಸುವಂತೆ ಬಿ. ದಯಾನಂದ ಅವರು ಮನವಿ ಮಾಡಿದ್ದಾರೆ.
8
+ ಸೂಚನೆ:ಸಮಾರಂಭಕ್ಕೆ ಆಗಮಿಸುವವರು ಬೆಳಗ್ಗೆ 8.30ರ ಒಳಗೆ ತಮ ಆಸನಗಳಲ್ಲಿ ಆಸೀನರಾಗತಕ್ಕದ್ದು. ಯಾವುದೇ ಕಾರಣಕ್ಕೂ ಮೈದಾನದೊಳಗೆ ಪ್ರವೇಶಿಸತಕ್ಕದ್ದಲ್ಲ. ಸಮಾರಂಭಕ್ಕೆ ಆಗಮಿಸುವ ಸಾರ್ವಜನಿಕರು ಮಣಿಪಾಲ್ ಸೆಂಟರ್‌ ಕಡೆಯಿಂದ ಕಬ್ಬನ್‌ ರಸ್ತೆ ಮೂಲಕ ಗೇಟ್‌ ನಂ. 4ಕ್ಕೆ ಆಗಮಿಸಲು ಸೂಚಿಸಲಾಗಿದೆ.
9
+ ಕಾರ್ಯಕ್ರಮಕ್ಕೆ ಆಗಮಿಸುವ ವ್ಯಕ್ತಿಯೊಬ್ಬರು ಅನಗತ್ಯ ಲಗೇಜು ಹಾಗೂ ಇತರೇ ವಸ್ತುಗಳನ್ನು ತರುವಂತಿಲ್ಲ. ಯಾವುದಾದರೂ ಅನುಮಾನಾಸ್ಪದ ವಸ್ತುಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಸಮವಸ್ತ್ರದಲ್ಲಿರುವ ಪೊಲೀಸ್‌‍ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.
10
+ ನಿಷಿದ್ಧ ವಸ್ತುಗಳು:ಮೈದಾನದೊಳಗೆ ಸಿಗರೇಟ್‌, ಬೆಂಕಿ ಪೆಟ್ಟಿಗೆ, ಹರಿತವಾದ ವಸ್ತು ಹಾಗೂ ಚಾಕು- ಚೂರಿಗಳು, ಕರಪತ್ರಗಳು, ಕಪ್ಪು ಕರವಸ್ತ್ರಗಳು, ಬಣ್ಣದ ದ್ರಾವಣಗಳು, ತಿಂಡಿ- ತಿನಿಸುಗಳು, ವಿಡಿಯೋ ಮತ್ತು ಸ್ಟಿಲ್‌ ಕ್ಯಾಮೆರಾಗಳು, ಮದ್ಯದ ಬಾಟಲ್‌ಗಳು, ಮಾದಕ ವಸ್ತುಗಳು, ನೀರಿನ ಬಾಟಲ್‌ಗಳು ಹಾಗೂ ಕ್ಯಾನ್‌ಗಳು, ಕೊಡೆ(ಛತ್ರಿ), ಶಸಾ್ತ್ರಸ್ತ್ರಗಳು, ಪಟಾಕಿ ಮತ್ತು ಸ್ಫೋಟಕ ವಸ್ತುಗಳನ್ನು ತರುವಂತಿಲ್ಲ.
11
+ ವಾಹನಗಳ ನಿಲುಗಡೆ:ಕಾರ್‌ ಪಾಸುಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಪಾಸ್‌‍ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಂಡು ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್ , ಅಗ್ನಿಶಾಮಕದಳದ ವಾಹನಗಳು, ನೀರಿನ ಟ್ಯಾಂಕರ್‌, ಕೆಎಸ್‌‍ಆರ್‌ಪಿ, ಕ್ಯೂ.ಆರ್‌ಟಿ, ಬಿಬಿಎಂಪಿ ಹಾಗೂ ಪಿಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2ರ ಮುಖಾಂತರ ಪರೇಡ್‌ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್‌ ವಾಲ್‌ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.ಕಾರ್ಯಕ್ರಮದಲ್ಲಿ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
12
+ ವಾಹನ ನಿಲುಗಡೆ ನಿಷಿದ್ಧ ರಸ್ತೆಗಳು:ಸೆಂಟ್ರಲ್‌ ಸ್ಟ್ರೀಟ್‌, ಅನಿಲ್‌ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್‌‍ ನಿಲ್ದಾಣದವರೆಗೆ ಮತ್ತು ಕಬ್ಬನ್‌ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್‌. ರಸ್ತೆ ಮತ್ತು ಕಬ್ಬನ್‌ ರಸ್ತೆ ಜಂಕ್ಷನ್‌ವರೆಗೆ ಹಾಗೂ ಎಂಜಿ ರಸ್ತೆ ಅನಿಲ್‌ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಸ ವೃತ್ತದವರೆಗೆ.
13
+ ಸಾರ್ವಜನಿಕರಲ್ಲಿ ಮನವಿ:ಮಾಣಿಕ್‌ ಷಾ ಪೆರೇಡ್‌ ಮೈದಾನ ಮತ್ತು ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ��ಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಗಳನ್ನು ಬಳಸಲು ಕೋರಲಾಗಿದೆ.ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮೊಂದಿಗಿರಲಿದ್ದು, ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ 112ಗೆ ಕರೆ ಮಾಡಲು ಸೂಚಿಸಲಾಗಿದೆ. ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ತಮ ಸಹಕಾರ ಬಯಸುವುದಾಗಿ ನಗರ ಸಂಚಾರಿ ಪೊಲೀಸರು ಕೋರಿದ್ದಾರೆ.
eesanje/url_46_46_8.txt ADDED
@@ -0,0 +1,6 @@
 
 
 
 
 
 
 
1
+ ವರಮಹಾಲಕ್ಷ್ಮಿಗೆ ಏರಿದ ಹೂವಿನ ಬೆಲೆ, ರೈತರಿಗೆ ಸಂತಸ..!
2
+ ಬೆಂಗಳೂರು, ಆ.13-ಶ್ರಾವಣ ಮಾಸ ಸಾಲು ಸಾಲು ಹಬ್ಬಗಳ ಮಾಸ… ವರಮಹಾಲಕ್ಷ್ಮಿಯನ್ನು ಬರಮಾಡಿಕೊಳ್ಳುಲು ತಯಾರಿ ಭರದಿಂದ ಸಾಗಿವೆ. ಆದರೆ ಹೂಗಳ ಬೆಲೆ ಏರಿದ್ದು, ಗ್ರಾಹಕರಿಗೆ ಸಂಕಷ್ಟವಾದರೆ, ರೈತರಿಗೆ ಸಂತಸ ತಂದಿದೆ.ಆಷಾಢ ಮಾಸದಲ್ಲಿ ಯಾವುದೆ ಹಬ್ಬ, ಶುಭ ಸಮಾರಂಭಗಳು ನಡೆಯುವುದಿಲ್ಲ.
3
+ ಕಳೆದ ಒಂದು ತಿಂಗಳಿನಿಂದ ಕಡಿಮೆಯಿದ್ದ ಹೂಗಳ ಬೆಲೆ ಕಳೆದ ಒಂದು ವಾರದಿಂದ ನಿಧಾನವಾಗಿ ಏರತೊಡಗಿದೆ. ಅದರಲ್ಲೂ ವರಾಮಹಾಲಕ್ಷಿಹಬ್ಬಕ್ಕೆ ಇನ್ನೆರಡು ದಿನ ಬಾಕಿ ಉಳಿದಿದ್ದು, ಮಾರುಕಟ್ಟೆಗೆ ತರಹೇವಾರಿ ಹೂಗಳು ಬರುತ್ತಿವೆ. ಇಂದಿನಿಂದಲೇ ವ್ಯಾಪಾರಿಗಳು ಬೆಲೆಯನ್ನು ಹೆಚ್ಚಿಸಿ ಮಾರಾಟ ಮಾಡುತ್ತಿದ್ದಾರೆ.
4
+ ಕಳೆದ ಕೆಲ ದಿನಗಳ ಹಿಂದೆ ಕೆಜಿಗೆ 80 ರೂ.ಗೆ ಮಾರಾಟವಾಗುತ್ತಿದ್ದ ಸುನಾಮಿ ರೋಜ್‌ 200 ರೂ. ತಲುಪಿದೆ. ಸೇವಂತಿಗೆ ಕೆಜಿಗೆ 250ರೂ., ಮಾರಿಗೋಲ್ಡ್ 250ರೂ. ಕನಕಾಂಬರ ಒಂದು ಸಾವಿರ ರೂ. ತಲುಪಿದೆ.
5
+ ರಾಜ್ಯದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಜಿಲ್ಲೆಗಳಲ್ಲಿ ಹೆಚ್ಚಾಗಿ ಕನಕಾಂಬರ, ಸೇವಂತಿಗೆ, ಚೆಂಡು ಹೂ, ಸುಗಂಧರಾಜ, ಕಾಕಡ ಹೂಗಳನ್ನು ಬೆಳೆಯಲಾಗುತ್ತಿದ್ದು, ಬಿರು ಬೇಸಿಗೆಯಿಂದ ನೀರಿಲ್ಲದೆ ಒಣಗಿದ್ದ ಹೂವಿನ ತೋಟ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮತ್ತೆ ಚಿಗುರೊಡೆದ್ದು ಇಳುವರಿ ಚೆನ್ನಾಗಿ ಬಂದಿದೆ.
6
+ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣಲ್ಲಿ ಹೂ ಬರುತ್ತಿದ್ದು, ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದೆ. ಈಗಾಗಲೆ ಮನೆಗಳಲ್ಲಿ ಲಕ್ಷ್ಮಿ ಪ್ರತಿಷ್ಠಾಪನೆಗೆ ಗೃಹಿಣಿಯರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಂದವಾಗಿ ಅಲಂಕರಿಸಲು ಹೂಗಳು ಹೆಚ್ಚಾಗಿ ಬೇಕು. ಬೆಲೆ ಹೆಚ್ಚಾದರೂ ಸರಿಯೇ ಹಬ್ಬ ಮಾಡಬೇಕಲ್ಲ ಎಂದು ಮಹಿಳೆಯರು ಸಿದ್ಧತೆಯಲ್ಲಿದ್ದಾರೆ.
eesanje/url_46_46_9.txt ADDED
@@ -0,0 +1,8 @@
 
 
 
 
 
 
 
 
 
1
+ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ ಅದ್ಧೂರಿ ದಸರಾ
2
+ ಮೈಸೂರು, ಆ. 13-ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ 14 ಆನೆಗಳು ಭಾಗವಹಿಸಲಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ ದಸರ ಉತ್ಸವ ನೆರವೇರಲಿದೆ.ಅಭಿಮನ್ಯು, ವರಲಕ್ಷಿ ಧನಂಜಯ, ಗೋಪಿ ,ಭೀಮ, ಲಕ್ಷಿ, ಕಂಜನ್‌, ರೋಹಿತ್‌, ಏಕಲವ್ಯ ಆನೆಗಳು ಮೊದಲ ತಂಡದಲ್ಲಿ ಆಗಮಿಸಲಿವೆ. ಎರಡನೇ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷಿ, ಹಿರಣ್ಯ ಆನೆಗಳು ಮೈಸೂರಿಗೆ ಆಗಮಿಸಲಿವೆ.
3
+ ಹೆಚ್ಚುವರಿಯಾಗಿ ಹರ್ಷ, ಅಯ್ಯಪ್ಪ, ಪಾರ್ಥ ಸಾರಥಿ ಹಾಗೂ ಮಾಲಾದೇವಿ ಆನೆಗಳು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿವೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
4
+ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ -2024ರ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ ಬಾರಿ ಬರಗಾಲದ ಕಾರಣ ಅದ್ಧೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಬಹುತೇಕ ಎಲ್ಲಾ ಜಲಾಶಯಗಳು ತುಂಬಿವೆ. ಹಾಗಾಗಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದೆ.
5
+ ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂ. ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕೆಂದು ಸೂಚಿಸಲಾಗಿದೆ.
6
+ ಅ.3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ.ಆಗಸ್ಟ್‌‍ 21ರಂದು ಬೆಳಿಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ನಡೆಯಲಿದೆ.
7
+ ಅಕ್ಟೋಬರ್‌ 3 ರಿಂದ ದಸರಾ ಮಹೋತ್ಸವ 12ರ ವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗತ್ತದೆ. ಅಕ್ಟೋಬರ್‌ 12ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆ ವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ.
8
+ ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚು ಅ���ಕಾಶ ದೊರಕಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿಸಿದ್ದರಾಮಯ್ಯ ಸೂಚಿಸಿದ್ದಾರೆ. ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ.
eesanje/url_46_47_1.txt ADDED
@@ -0,0 +1,4 @@
 
 
 
 
 
1
+ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ
2
+ ಬೆಂಗಳೂರು :ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ.
3
+ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
4
+ ನಿರ್ದೇಶಕ ಪಟ್ಟಿ :1.ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,2.ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ .3.ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ.4.ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.5.ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ.6.ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
eesanje/url_46_47_10.txt ADDED
@@ -0,0 +1,6 @@
 
 
 
 
 
 
 
1
+ ಗ್ರೇಟರ್‌ ಬೆಂಗಳೂರು ರಚನೆ ಬಿಟ್ಟು ಬಿಬಿಎಂಪಿ ಚುನಾವಣೆ ನಡೆಸುವಂತೆ ಸಿಎಂಗೆ ಪತ್ರ
2
+ ಬೆಂಗಳೂರು,ಆ.12-ಗ್ರೀಟರ್‌ ಬೆಂಗಳೂರು ರಚನೆ ಬಗ್ಗೆ ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಆ ಯೋಚನೆ ಕೈಬಿಟ್ಟು ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ಹಕ್ಕು ಅಧ್ಯಯನ ಕೇಂದ್ರ ಪತ್ರ ಬರೆದಿದೆ.
3
+ ಗ್ರೇಟರ್‌ ಬೆಂಗಳೂರು ರಚನೆಯಲ್ಲಿ ಪ್ರಗತಿಪರ ಅಂಶಗಳಿಲ್ಲ ಎಂದು ನಾಗರಿಕರ ಅಭಿಪ್ರಾಯವಾಗಿದೆ. ಅಲ್ಲದೆ ಬ್ರಾಂಡ್‌ ಬೆಂಗಳೂರು ಸಮಿತಿ ನೀಡಿದ್ದ ಹಲವು ಅಪೇಕ್ಷಣೀಯ ಶಿಫಾರಸ್ಸುಗಳನ್ನು ಸರ್ಕಾರ ನಿರ್ಲಕ್ಷಿಸಿದೆ ಎಂಬ ಆರೋಪ ಕೇಳಿಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಅಮರೇಶ್‌ ಅವರು ಸಿಎಂಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
4
+ ಮೆಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಧಾನ ಮಂಡಲದಲ್ಲಿ ಮಂಡಿಸಿರುವ ಗ್ರೀಟರ್‌ ಬೆಂಗಳೂರು ಆಡಳಿತ ಮಸೂದೆಗೆ ಜನಾಗ್ರಹ ಸಂಸ್ಥೆ ನಡೆಸಿದ ತುಲನಾತ್ಮಕ ವಿಶ್ಲೇಷಣೆಯಲ್ಲಿ 10 ಅಂಕಗಳಿಗೆ ಕೇವಲ 3.35 ಅಂಕಗಳು ಸಾರ್ವಜನಿಕರಿಂದ ಲಬಿಸಿರುವುದು ಬಿಬಿಜಿ ಜನಪ್ರಿಯ ಅಲ್ಲವೆಂದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ.
5
+ ಸುಪ್ರೀಂ ಕೋರ್ಟ್‌ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಆದೇಶಿಸುವುದೋ ಎಂಬ ಭಯದಿಂದ ಬಿಬಿಎಂಪಿ ಚುನಾವಣೆಯನ್ನು ಮುಂದೂಡುವ ಕಾರಣಕ್ಕಾಗಿ ಸದರಿ ಜನಪ್ರಿಯವಲ್ಲದ ಜಿಬಿಜಿ ಮಸೂದೆಯನ್ನು ತರಾತುರಿಯಲ್ಲಿ ಮಂಡಿಸಿದಂತೆ ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.
6
+ ಕಳೆದ 4 ವರ್ಷ ಕಳೆದರೂ ಚುನಾವಣೆ ಮಾಡದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ. ಆದ್ದರಿಂದ ತಕ್ಷಣವೇ ಜಿಬಿಜಿ ಮಸೂದೆಯನ್ನು ಕೈಬಿಟ್ಟು ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.
eesanje/url_46_47_11.txt ADDED
@@ -0,0 +1,8 @@
 
 
 
 
 
 
 
 
 
1
+ ಟಿಬಿ ಡ್ಯಾಮ್ ಡ್ಯಾಮೇಜ್ ಅಚಾನಕ್‌ ಆಗಿದ್ದಲ್ಲ : ಜನಾರ್ದನ ರೆಡ್ಡಿ ಆರೋಪ
2
+ ಕೊಪ್ಪಳ,ಆ.12-ತುಂಗಭದ್ರಾ ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಎಂದು ಬಹಿರಂಗ ಪಡಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
3
+ ತುಂಗಭದ್ರಾ ಜಲಾಶಯದಲ್ಲಿ ಕಳಚಿಕೊಂಡ 19ನೇ ಕ್ರಸ್ಟ್‌ಗೇಟ್‌ ವೀಕ್ಷಣೆ ಮಾಡಿದ ಶಾಸಕ ಜನಾರ್ದನ ರೆಡ್ಡಿ , ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತುಂಗಭದ್ರಾ ಜಲಾಶಯದ ನಿರ್ವಹಣೆ ಯಾರಿಗೆ ಕೊಟ್ಟಿದ್ದಾರೆ? ಇದಕ್ಕೆ ಎಲ್ಲಾ ಸರ್ಕರವೇ ಹೊಣೆ. ಡಿಕೆಶಿ ಅಚಾನಕ್‌ ಆಗಿದೆ ಎಂದು ಹೇಳುತ್ತಾರೆ, ಇದನ್ನು ಒಪ್ಪುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದ್ದಾರೆ.
4
+ ತುಂಗಭದ್ರಾ ಡ್ಯಾಂ ವಿಚಾರದಲ್ಲಿ ನಾನು ಯಾರ ಮೇಲೂ ವೈಯಕ್ತಿಕ ಆರೋಪ ಮಾಡಲ್ಲ. ಆದ್ರೆ ಈ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ವಿರುದ್ಧ ಸಿಬಿಐ ತನಿಖೆಯಾಗಬೇಕು. ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಸರ್ಕಾರ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
5
+ ಅಲ್ಲದೇ ಗೇಟ್‌ ಅನ್ನು ನೀವು ಸರಿ ಮಾಡದಿದ್ದರೆ ಯಾರಾದರೂ ಒಬ್ಬರು ಸರಿಪಡಿಸ್ತಾರೆ. ಆದ್ರೆ ಇದು ನಮ ಭಾಗದ ರೈತರಿಗೆ ಆದ ದೊಡ್ಡ ಅನ್ಯಾಯ. ಸರ್ಕಾರ ಇದರ ಸಂಪೂರ್ಣ ಜವಾಬ್ದಾರಿ ಹೊರಬೇಕು, ನಿರ್ಲಕ್ಷತನ ತೋರಿದವರ ವಿರುದ್ಧ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.
6
+ ಬೇಸಿಗೆ ಕಾಲದಲ್ಲಿ ಡ್ಯಾಂ ಗೇಟ್‌ ಪರಿಶೀಲಿಸಿ, ನಿರ್ವಹಣೆ ಮಾಡಬೇಕು. ಸರ್ಕಾರ ಯಾವ ಕೆಲಸವನ್ನೂ ಮಾಡಿಲ್ಲ. ಹಳೇ ಡ್ಯಾಂಗಳ ನಿರ್ವಹಣೆಗೆ ಕೇಂದ್ರ ಸರ್ಕಾರ ತಂಡ ರಚನೆ ಮಾಡಿದೆ. ಅದನ್ನು ಇವರು ಸಂಪರ್ಕ ಮಾಡಿದ್ದಾರಾ? ಇದೆಲ್ಲವೂ ಮುಖ್ಯವಾಗುತ್ತೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತೆ! ಕರ್ನಾಟಕ ಕಾಂಗ್ರೆಸ್‌‍ ಸರ್ಕಾರ ಇದ್ಯಾವುದೇ ನಿಯಮಗಳನ್ನು ಅನುಸರಿಸುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ.
7
+ ಸರಿಯಾಗಿ ನಿರ್ವಹಣೆ ಮಾಡಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. ಇದರಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತೆ. ಇದು ಮೂರು ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾದರೂ ಡ್ಯಾಂ ನಮ ಸುಪರ್ದಿಯಲ್ಲಿದೆ. ನಾನು ಯಾವುದೇ ರಾಜಕೀಯ ಉದ್ದೇಶದಿಂದ ಮಾತನಾಡುತ್ತಿಲ್ಲ.
8
+ ವಿಶ್ವದಲ್ಲಿ ಇರುವ ಎಲ್ಲಾ ರೀತಿಯ ಟೆಕ್ನಾಲಜಿ ಬಳಸಿ ಇದನ್ನು ಕೂಡಲೇ ನಿರ್ವಹಣೆ ಮಾಡಿ ಡ್ಯಾಂ ಉಳಿಸುವ ಕೆಲಸ ಮಾಡಬೇಕು. ಡಿಕೆಶಿ ಹೇಳಿದಂತೆ ಅಚಾನಕ್‌ ಆಗಿ ಕಟ್‌ ಆಗಿದೆ ಎಂದರೆ ಸಣ್ಣ ಮಕ್ಕಳು ಕೂಡಾ ನಗುತ್ತಾರೆ. ಈ ವೈಫಲ್ಯದ ಸಂಪೂರ್ಣ ಜವಾಬ್ದಾರಿ ಸರ್ಕಾರವೇ ತೆಗೆದುಕೊಳ್ಳಬೇಕು. ಇದು ತುಂಗಭದ್ರಾ ಡ್ಯಾಂ ಬೋರ್ಡ್‌ ಹಾಗೂ ಸರ್ಕಾರ ಎರಡರ ವೈಲ್ಯವೂ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
eesanje/url_46_47_12.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ಹೈಕೋರ್ಟ್‌ ತಡೆ : ರಾಜ್ಯಸರ್ಕಾರಕ್ಕೆ ಹಿನ್ನಡೆ
2
+ ಬೆಂಗಳೂರು,ಆ.12-ಇತಿಹಾಸ ಪ್ರಸಿದ್ಧ ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದ ರಾಜ್ಯಸರ್ಕಾರಕ್ಕೆ ನ್ಯಾಯಾಲಯದಲ್ಲಿ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ.ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಮೈಸೂರಿನ ಅರಮನೆಯ ಪ್ರಮೋದಾ ದೇವಿ ಒಡೆಯರ್‌ ಅವರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು.
3
+ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್‌ನ ಏಕಸದಸ್ಯ ಪೀಠ ಮುಂದಿನ ಆದೇಶದವರೆಗೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್‌‍.ಆರ್‌.ಕೃಷ್ಣಕುಮಾರ್‌ರವರು ತಡೆಯಾಜ್ಞೆ ನೀಡಿದ್ದು, ಮುಂದಿನ ಅರ್ಜಿ ವಿಚಾರಣೆಯನ್ನು ಇದೇ ತಿಂಗಳ 22 ಕ್ಕೆ ಮುಂದೂಡಿದ್ದಾರೆ.
4
+ ಅರ್ಜಿದಾರರ ಪರವಾಗಿ ವಕೀಲರಾದ ಮಾನಸಿ ಕುಮಾರ್‌ ಅವರು ವಾದ ಮಂಡಿಸಿದ್ದರು.ಕಳೆದ ಅಧಿವೇಶನದ ವೇಳೆ ವಿಧಾನಮಂಡಲದ ಉಭಯಸದನಗಳಲ್ಲಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆಯನ್ನು ಮಂಡಿಸಿ ಅಂಗೀಕರಿಸಲಾಗಿತ್ತು. ಆದರೆ ಈ ಕಾಯ್ದೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ರಾಜಮನೆತನವನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಅರ್ಜಿದಾರರು ದೂರಿದ್ದರು.
5
+ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಹೊಸ ಕಾಯ್ದೆಯ ಮೂಲಕ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ದೇವಸ್ಥಾನ ಕಟ್ಟಿ ತಲೆ ತಲಾಂತರಗಳಿಂದ ಪೂಜಿಸಿಕೊಂಡು ಬಂದ ಒಡೆಯರ ರಾಜಮನೆತನಕ್ಕೆ ಅನ್ಯಾಯ ಮಾಡಲಾಗಿದೆ.
6
+ ಈ ಮೂಲಕ ಚಾಮುಂಡೇಶ್ವರಿ ದೇವಾಲಯಕ್ಕೂ ಹಾಗೂ ರಾಜಮನೆತನಕ್ಕೂ ಇರುವ ಸಂಬಂಧ ಕಡಿತಗೊಳಿಸಿ ಎಲ್ಲ ಆಸ್ತಿ, ಪೂಜೆ, ವಿಧಿ ವಿಧಾನ, ಕಾಯ್ದೆ ರಚನೆ ಎಲ್ಲವೂ ಪ್ರಾಧಿಕಾರದ ಪಾಲಾಗಲಿದೆ. ಇದನ್ನು ಮಹಾರಾಣಿ ಪ್ರಮೋದಾದೇವಿ ಅವರು ಹೈಕೋರ್ಟ್‌ ಮೂಲಕ ಪ್ರಶ್ನೆ ಮಾಡಿದ್ದರು.
7
+ ಸೆಕ್ಷನ್‌ 2(ಎ) : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಬೆಟ್ಟದ ಸಂಪೂರ್ಣ ಸೌಕರ್ಯಗಳ ಬಗ್ಗೆ ಸರ್ಕಾರದಿಂದ ತೀರ್ಮಾನ ರಸ್ತೆ, ಲೈಟ್ಸ್‌‍, ಕ್ಲೀನ್‌, ಅಂಗಡಿ, ಮಾರ್ಕೆಟ್‌, ಚರಂಡಿ, ಪೊಲೀಸ್‌‍, ಹಾಲಿನ ಅಂಗಡಿ, ಮನೋರಂಜನೆ ಕಾರ್ಯಕ್ರಮಗಳು ಸೇರಿ ಎಲ್ಲಾ ರಾಜ್ಯ ಸರ್ಕಾರದ ಅಧಿಸೂಚನೆ ಮೇಲೆ ನಡೆಸಲು ಅಧಿಕಾರ. (ಇದರಲ್ಲಿ ರಾಜಮನೆತನದ ಎಲ್ಲ ಅಧಿಕಾರ, ಮಧ್ಯಸ್ಥಿಕೆ ತೆರವು ಆಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು)
8
+ ಸೆಕ್ಷನ್‌ 3 ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಪ್ರಾಧಿಕಾರದ ರಚನೆಯ ಅಧಿಕಾರ ಸರ್ಕಾರಕ್ಕೆ ಸೇರಿದ್ದು, ಅದರ ಅಧ್ಯಕ್ಷ ಸ್ಥಾನ ಸಿಎಂ ಎಂದು ಸರ್ಕಾರದ ಕಾಯ್ದೆಯಲ್ಲಿದೆ. ಪ್ರಾಧಿಕಾರದ ಪದಾಧಿಕಾರಿಗಳಲ್ಲಿ ರಾಜಮನೆತನವೇ ಇಲ್ಲ. ಬದಲಾಗಿ ಸ್ಥಳೀಯ, ಮಿ���ಿಸ್ಟರ್‌, ಶಾಸಕ, ಎಂಪಿ ಅಧಿಕಾರಿಗಳು ಆಗಿರುತ್ತಾರೆ. (ಇಲ್ಲಿ ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕು ಮಾಡಲಾಗಿದೆ).
9
+ ಸೆಕ್ಷನ್‌ 12(1) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಪ್ರಾಧಿಕಾರದ ನೌಕರರ ನೇಮಕ ಮಾಡುವ ವಿಚಾರ ಅರ್ಚಕರು ಸೇರಿ ನೌಕರರನ್ನು ನೇಮಿಸುವ ಅಧಿಕಾರ ಸರ್ಕಾರಕ್ಕೆ ನೀಡಲಾಗಿದೆ. (ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕು ಆಗಿದೆ)
10
+ ಸೆಕ್ಷನ್‌ 14(3) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಪ್ರಾಧಿಕಾರದ ಸಭೆಯ ತೀರ್ಮಾನಗಳ ಬಗ್ಗೆ ಸರ್ಕಾರಕ್ಕೆ ಅಧಿಕಾರ ನೀಡಲಾಗಿದೆ. ಯಾವುದೇ ತಿರ್ಮಾನ ಇದ್ದರೂ ಅದು ಸರ್ಕಾರದ ನಿರ್ಣಯ ಮಾತ್ರ ಆಗಿರುತ್ತದೆ. (ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕು ಆಗಿದೆ)
11
+ ಸೆಕ್ಷನ್‌ 14(4) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಅನ್ವಯ ಪ್ರಾಧಿಕಾರದ ತೀರ್ಮಾನಗಳನ್ನು ಜಾರಿ ಮಾಡುವಲ್ಲಿ ಕಾರ್ಯದರ್ಶಿಗೆ ಅಧಿಕಾರ ನೀಡಲಾಗಿದೆ. ಪ್ರಾಧಿಕಾರದ ಬಗ್ಗೆ ರಾಜ್ಯ ಸರ್ಕಾರದ ಆದೇಶಗಳನ್ನು ಜಾರಿ ಮಾಡುವ ಅಧಿಕಾರ ಹೊಂದಿದೆ.
12
+ (ರಾಜಮನೆತನದ ಸಂಪೂರ್ಣ ಅಧಿಕಾರವೇ ಮೊಟಕು ಆಗಿದೆ)ಸೆಕ್ಷನ್‌ 16(1) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಪ್ರಾಧಿಕಾರದ ತಿರ್ಮಾನದ ಸುತ್ತೋಲೆಯೂ ಮುಖ್ಯಮಂತ್ರಿ ಅವರ ಸಹಿಯ ನಂತರವೇ ಬಿಡುಗಡೆ ಆಗಲಿದೆ. (ರಾಜಮನೆತನಕ್ಕೆ ಪ್ರಾಧಿಕಾರದ ಮಾಹಿತಿಯನ್ನು ನೀಡುವ ಅವಕಾಶದಿಂದ ವಂಚನೆ ಮಾಡಲಾಗಿದೆ)
13
+ ಸೆಕ್ಷನ್‌ 17(1) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ರ ಅನ್ವಯ ಮುಖ್ಯಮಂತ್ರಿಗೆ ತುರ್ತು ಯಾವುದೇ ನಿರ್ದಾರ ತೆಗದುಕೊಳ್ಳುವ ಅಧಿಕಾರ ನೀಡಲಾಗಿದೆ. ಜೊತೆಗೆ, ಸಿಎಂ ಪ್ರಾಧಿಕಾರದ ಅಧ್ಯಕ್ಷರಾಗಿರಲಿದ್ದು, ತಾವು ಭಾವಿಸಿದ ತಿರ್ಮಾನ ಮಾಡುವ ಅಧಿಕಾರ ಹೊಂದಿರುತ್ತಾರೆ. (ರಾಜಮನೆತನಕ್ಕೂ ದೇವಾಲಯದ ಪ್ರಾಧಿಕಾರಕ್ಕೆ ಅಧಿಕಾರವೇ ಕಡಿತ ಮಾಡಲಾಗಿದೆ)
14
+ ಸೆಕ್ಷನ್‌ 20(1)(ಒ) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಅನ್ವಯ ಚಾಮುಂಡಿ ಪ್ರಾಧಿಕಾರದ ಸ್ವತ್ತಿನ ಮಾರಾಟದ ಅಧಿಕಾರ ನಿಗಮಕ್ಕೆ ಸೇರಿದೆ. ಯಾವುದೇ ಆಸ್ತಿಯನ್ನು ಮಾರಾಟ ಮಾಡುವ ಅಧಿಕಾರ, ಯಾವುದೇ ಆಸ್ತಿಯನ್ನು ಬಾಡಿಗೆಗೆ ನೀಡುವ ಅಧಿಕಾರ ಬೇಕಾದರೆ ಎಕ್‌್ಸಚೇಂಜ್‌ ಮಾಡಿಕೊಳ್ಳುವ ಅಧಿಕಾರ ನಿಗಮಕ್ಕೆ ನೀಡಲಾಗಿದೆ. ಅದರಲ್ಲಿಯೂ ನಿಗಮದ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿ ಅವರೇ ಹೊಂದಿರುತ್ತಾರೆ (ರಾಜಮನೆತನದ ಚಾಮುಂಡಿ ಬೆಟ್ಟವನ್ನು ಕಸಿದುಕೊಂಡಿರುವ ಆರೋಪ) ಎಂದು ಅರ್ಜಿದಾರರು ವಾದ ಮಾಡಿದ್ದರು.
eesanje/url_46_47_2.txt ADDED
@@ -0,0 +1,7 @@
 
 
 
 
 
 
 
 
1
+ ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಜಾಗ ಒದಗಿಸಲು ಸೂಚನೆ
2
+ ಬೆಂಗಳೂರು, ಆ.12-ಪ್ರತಿ ಗ್ರಾಮದಲ್ಲೂ ಸ್ಮಶಾನಗಳಿಗೆ ಜಾಗ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಪ್ರತಿ ಗ್ರಾಮದಲ್ಲೂ ಸಶಾನಗಳು ಇರುವ ಹಾಗೂ ಇಲ್ಲದಿರುವ ಬಗ್ಗೆ ಸರ್ವೆ ನಡೆಸಬೇಕು. ಸಶಾನಗಳು ಇಲ್ಲದಿರುವ ಗ್ರಾಮಗಳನ್ನು ಗುರುತಿಸಿ ಸಶಾನಕ್ಕೆ ಬೇಕಾದ ಸ್ಥಳಾವಕಾಶ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ.
3
+ ಅದೇ ರೀತಿ ಕೆರೆಗಳ ಒತ್ತುವರಿ ಬಗ್ಗೆಯೂ ಸರ್ವೆ ನಡೆಸಬೇಕು. ಕೆರೆಯ ಅಂಗಳ ಒತ್ತುವರಿಯಾಗಿರುವುದನ್ನು ಗುರುತಿಸಿ ತಕ್ಷಣವೇ ಒತ್ತುವರಿ ತೆರವಿಗೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.
4
+ ಸಭೆಯಲ್ಲಿ ಆಯಾ ಜಿಲ್ಲಾ ಮತ್ತು ತಾಲ್ಲೂಕಿಗೆ ಸಂಬಂಧಿಸಿದಂತೆ ಸಶಾನಗಳ ಹಾಗೂ ಕೆರೆ ಒತ್ತುವರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಮೇಲಿನಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
5
+ ಬಹಳ ವರ್ಷಗಳಿಂದ ರೈತರು ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಆದಷ್ಟು ಶೀಘ್ರವಾಗಿ ಬಗರ್ ಹುಕುಂನಡಿ ಸಲ್ಲಿಸಿರುವ ಅರ್ಜಿಗಳನ್ನು ಇತ್ಯರ್ಥಪಡಿಸಿ. ಅರ್ಹರಿಗೆ ಬಗರ್ ಹುಕುಂನಡಿ ಜಮೀನು ಮಂಜೂರು ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಅವರು ತಾಕೀತು ಮಾಡಿದ್ದಾರೆ.
6
+ ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆಸಕ್ತಿ ತೋರದ ಅಧಿಕಾರಿಗಳನ್ನು ತರಾಟೆಗೆ ತೆಗೆದಕೊಂಡ ಸಚಿವರು, ಸಲ್ಲಿಸಿರುವ ಅರ್ಜಿ ನ್ಯಾಯಸಮತವಾಗಿದ್ದರೆ, ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡಲು ಅಧಿಕಾರಿಗಳಿಗೆ ಏನು ಸಮಸ್ಯೆ? ಅಧಿಕಾರಿಗಳು ಮಾಡುವ ತಪ್ಪಿಗೆ ಜನಪ್ರತಿನಿಧಿಗಳು ತಲೆತಗ್ಗಿಸಬೇಕೆ? ಗೋಮಾಳ ಜಮೀನು ಮಂಜೂರಾತಿ ಬಗ್ಗೆ ಕಾನೂನು ಪುಸ್ತಕದಲ್ಲಿ ಸ್ಪಷ್ಟವಾಗಿದೆ.ಅದನ್ನು ಓದಿ ಪಾಲಿಸಲು ನಿಮಗೇನು ಸಮಸ್ಯೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
7
+ 40 ವರ್ಷಗಳ ಹಿಂದೆ ಮಂಜೂರಾದ ಜಮೀನಿಗೆ ಇನ್ನೂ ಹದ್ದುಬಸ್ತು ಮಾಡಿಕೊಡದೇ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಸುತ್ತಿರುವ ವಿಚಾರದ ಬಗ್ಗೆ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಕಂದಾಯ ಇಲಾಖೆಯ ಆಯುಕ್ತ ವಿ.ಸುನೀಲ್ ಕುಮಾರ್, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್, ಸರ್ವೇ ಇಲಾಖೆಯ ಆಯುಕ್ತ ಮಂಜುನಾಥ್, ಕರ್ನಾಟಕ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತ ಶಿವಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
eesanje/url_46_47_3.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದ ಒಳನಾಡಿನಲ್ಲಿ 5 ದಿನ ವ್ಯಾಪಕ ಮಳೆ ಮುನ್ಸೂಚನೆ
2
+ ಬೆಂಗಳೂರು, ಆ.12– ನೈರುತ್ಯ ಮುಂಗಾರು ಮಳೆ ಎರಡು ವಾರದ ನಂತರ ಮತ್ತೆ ಚುರುಕಾಗಿದ್ದು, ರಾಜ್ಯದ ಒಳನಾಡಿನಲ್ಲಿ ಇನ್ನೂ ಐದು ದಿನಗಳ ಕಾಲ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
3
+ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಇಂದಿನಿಂದ ಆಗಸ್್ಟ 16ರವರೆಗೆ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಕೆಲವೆಡೆ ಮಿಂಚು, ಗುಡುಗು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗಲಿದ್ದು, ಹಲವೆಡೆ ಉಳಿದಂತೆ ಸಾಧಾರಣ ಮಳೆಯಾಗಲಿದೆ.
4
+ ಉತ್ತರ ಒಳನಾಡಿನಲ್ಲಿ ಇಂದಿನಿಂದ ಗುರುವಾರದವರೆಗೆ ವ್ಯಾಪಕ ಪ್ರಮಾಣದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದರೂ ಮುಂದಿನ ಐದು ದಿನಗಳ ಕಾಲ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
5
+ ರಾಜಧಾನಿ ಬೆಂಗಳೂರಿನಲ್ಲಿ ಬೆಳಗಿನಜಾವ ಗುಡುಗು, ಮಿಂಚಿನ ಮಳೆಯಾಗಿದ್ದು, ತಗ್ಗು ಪ್ರದೇಶದ ರಸ್ತೆಗಳು, ಅಂಡರ್ ಪಾಸ್ಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ತಗ್ಗು ಪ್ರದೇಶಗಳಿಗೂ ನೀರು ನುಗ್ಗಿದ್ದು ಜನರು ಸಾಕಷ್ಟು ತೊಂದರೆ ಅನುಭವಿಸಿದರು.
6
+ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ.ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಮತ್ತು ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ.
eesanje/url_46_47_4.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಆ.12-ರಾಜ್ಯದಲ್ಲಿ ಮಾನವ ಹಾಗೂ ವನ್ಯ ಜೀವಿ ಸಂಘರ್ಷವನ್ನು ಶೂನ್ಯ ಪ್ರಮಾಣಕ್ಕೆ ತಗ್ಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
3
+ ನಗರದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಆನೆ ಮತ್ತು ಮಾನವ ಸಂಘರ್ಷ ನಿರ್ವಹಣೆಯ ಅಂತಾರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, 2017ರ ಗಣತಿಯ ಪ್ರಕಾರ ವಿಶ್ವಾದ್ಯಂತ 30 ಸಾವಿರಕ್ಕೂ ಹೆಚ್ಚು ಆನೆಗಳಿವೆ. ಅದರಲ್ಲಿ ಕರ್ನಾಟಕ 6,395 ಆನೆಗಳನ್ನು ಹೊಂದಿರುವ ಮೂಲಕ ಪ್ರಥಮ ಸ್ಥಾನದಲ್ಲಿದೆ. ಜಾಗತಿಕ ಆನೆಗಳ ಸಂಖ್ಯೆಯಲ್ಲಿ ಶೇ.25 ರಷ್ಟು ಪಾಲು ಹೊಂದಿದೆ.
4
+ 2022 ರ ಅಖಿಲ ಭಾರತ ಹುಲಿ ಸಮೀಕ್ಷೆಯಲ್ಲಿ 563 ಹುಲಿಗಳನ್ನು ಹೊಂದುವ ಮೂಲಕ ರಾಜ್ಯವು ಎರಡನೇ ಸ್ಥಾನದಲ್ಲಿದೆ. ದೊಡ್ಡ ಸಸ್ತನಿಗಳು, ಉನ್ನತ ಪರಭಕ್ಷಕಗಳು, ಸಸ್ಯಾಹಾರಿಗಳು ಮತ್ತು ಅರಣ್ಯ ಸಂಪನೂಲಗಳ ಆರೋಗ್ಯಕರ ಜನಸಂಖ್ಯೆಯನ್ನು ಕರ್ನಾಟಕ ಹೊಂದಿದೆ.
5
+ ರಾಜ್ಯದಲ್ಲಿ ಮೈಸೂರು ಮತ್ತು ದಾಂಡೇಲಿಯಲ್ಲಿ ತಲಾ 10 ಸಾವಿರ ಚದರ ಕಿ.ಮೀ.ನಂತೆ ಎರಡು ಆನೆ ಮೀಸಲು ಪ್ರದೇಶಗಳನ್ನು ಹೊಂದಿದೆ. ಇವು ಆನೆಗಳ ಪಾಲನೆ ಪೋಷಣೆ ಮತ್ತು ಸಂರಕ್ಷಣೆಗೆ ನಿರ್ಣಾಯಕ ಪಾತ್ರ ವಹಿಸಿವೆ ಎಂದರು.
6
+ ಅಭಿವೃದ್ಧಿಯ ಒತ್ತಡಗಳು ಮತ್ತು ಅರಣ್ಯಪ್ರದೇಶಗಳ ವಿಘಟನೆಗಳಿಂದ ಇತ್ತೀಚಿನ ವರ್ಷಗಳಲ್ಲಿ ಮಾನವ ವನ್ಯ ಜೀವಿ ಸಂಘರ್ಷ ಹೆಚ್ಚಳವಾಗಿದೆ. ರಾಜ್ಯದಲ್ಲಿ 10 ವರ್ಷಗಳಿಂದೀಚೆಗೆ 2,500 ಕ್ಕೂ ಹೆಚ್ಚು ಆನೆ -ಮಾನವ ಸಂಘರ್ಷಗಳು ಘಟಿಸಿದ್ದು, 350 ಮಾನವ ಜೀವ ಹಾನಿಯಾಗಿದೆ. ಅಪಾರ ಪ್ರಮಾಣದ ಬೆಳೆನಷ್ಟ ಸಂಭವಿಸಿದೆ.
7
+ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ನಿರ್ವಹಣೆ ಮಾಡಲು ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಲಾಗಿದೆ. 150 ಕೋಟಿ ರೂ. ಹಣದಲ್ಲಿ 300 ಕಿ.ಮೀ.ಗಳಿಗಿಂತ ಹೆಚ್ಚಿನ ರೈಲ್ವೆ ಬ್ಯಾರಿಕೇಡ್ಗಳು, 800 ಕಿ.ಮೀ. ಸೌರ ಬೇಲಿಗಳನ್ನು ಅಳವಡಿಸಲಾಗಿದೆ. ಆನೆ ನಿರೋಧಕ ಕಂಕಗಳಂತಹ ಭೌತಿಕ ತಡೆಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಕಾಡುಪ್ರಾಣಿಗಳು ನಾಡಿನೊಳಗೆ ಪ್ರವೇಶಿಸುವುದನ್ನು ತಪ್ಪಿಸುವ ಪ್ರಯತ್ನ ನಡೆದಿದ್ದು, ಕೃಷಿಕರ ಬೆಳೆಗಳಿಗೆ ರಕ್ಷಣೆ ದೊರೆಯುತ್ತಿದೆ.
8
+ ರೈತರು ಸ್ವಯಂ ಸೌರ ಬೇಲಿಗಳನ್ನು ಅಳವಡಿಸಿಕೊಳ್ಳಲು ಸಹಾಯಧನ ನೀಡುತ್ತಿರುವುದರಿಂದ 50 ಸಾವಿರ ಹೆಕ್ಟೇರ್ಗೂ ಹೆಚ್ಚಿನ ಕೃಷಿ ಭೂಮಿ ಸಂರಕ್ಷಿಸಿದಂತಾಗಿದೆ. ರಾಜ್ಯದಲ್ಲಿ 8 ವಿಶೇಷ ಆನೆ ಕಾರ್ಯಪಡೆಗಳು, 9 ಕಡೆ ಆನೆ ಕಾರ್ಯಪಡೆ ತಂಡಗಳನ್ನು ಸ್ಥಾಪಿಸಲಾಗಿದೆ. ಇವು 1200 ಕ್ಕೂ ಹೆಚ್ಚು ಸಂಘರ್ಷಗಳನ್ನು ಒಂದು ವರ್ಷದಲ್ಲಿ ತಡೆದಿವೆ ಎಂದು ಹೇಳಿದರು.
9
+ ಅರಣ್ಯದಲ್ಲಿ ವನ್ಯಜೀವಿಗಳಿಗೆ ಸೂಕ್ತ ಆವಾಸ ಸ್ಥಾನ ಅಭಿವೃದ್ಧಿ, ಹುಲ್ಲುಗಾವಲು, ಬಿದಿರಿನ ಪುನರ್ ಉತ್ಪಾದನೆ, ಸೌರ ಪಂಪ್ಗಳ ಮೂಲಕ ನೀರಿನ ಸೌಲಭ್ಯ ಸೇರಿ��ಂತೆ ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ.
10
+ ಸಾವಿರಾರು ವರ್ಷಗಳಿಂದಲೂ ಆನೆ ಮತ್ತು ಮನುಷ್ಯ ಸಹಬಾಳ್ವೆ ಮತ್ತು ಸಹಿಷ್ಣುತೆಯಿಂದ ಬದುಕು ನಡೆಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನಗರೀಕರಣ, ಕೃಷಿ ವಿಸ್ತರಣೆ, ಹೆದ್ದಾರಿ, ಗಣಿಗಾರಿಕೆ, ಕೈಗಾರಿಕಾ ಬೆಳವಣಿಗೆಗಳಿಂದಾಗಿ ಆನೆಗಳ ಆವಾಸ ಸ್ಥಾನ ತಗ್ಗಿದೆ.
11
+ ಕೃಷಿ ಪ್ರದೇಶಗಳು ವಿಸ್ತಾರಗೊಂಡಿದ್ದರಿಂದಾಗಿ ಅರಣ್ಯ ಪ್ರದೇಶ ಕಡಿಮೆಯಾಗುತ್ತಿದೆ. ಹೀಗಾಗಿ ಆನೆಗಳು ಮತ್ತು ವನ್ಯಜೀವಿಗಳು ನಾಡಿನತ್ತ ಬಂದು ಸಂಘರ್ಷ ಉಂಟಾಗುತ್ತಿದೆ. ಇದೊಂದು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಸವಾಲುಗಳನ್ನು ಹೊಂದಿರುವ ಸಂಕೀರ್ಣ ಸಮಸ್ಯೆ.
12
+ ತಾಪಮಾನ ಹೆಚ್ಚಳವೂ ಪರಿಣಾಮ ಬೀರುತ್ತದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮಾನವ ಹಾಗೂ ವನ್ಯಜೀವಿ ಸಂಘರ್ಷಕ್ಕೆ ತನ್ನದೇ ಆದ ಕಾರ್ಯತಂತ್ರಗಳನ್ನು ಅನ್ವೇಷಣೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅದಕ್ಕೆ ಅಗತ್ಯ ಬೆಂಬಲ ನೀಡಲು ಸರ್ಕಾರ ಸಿದ್ಧವಿದೆ.
13
+ ಸಮುದಾಯದ ಸಹಭಾಗಿತ್ವವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಕೇವಲ ಅರಣ್ಯ ಸಿಬ್ಬಂದಿಗಳಷ್ಟೇ ಅರಣ್ಯ ರಕ್ಷಣೆ, ವನ್ಯಜೀವಿ ಸಂಘರ್ಷ ತಡೆಯಲು ಸಾಧ್ಯವಿಲ್ಲ. ಆಧುನಿಕ ತಂತ್ರಜ್ಞಾನ ಮತ್ತು ಅರಣ್ಯದ ನೆರೆಹೊರೆಯ ಜನರ ಸಹಯೋಗವೂ ಅಗತ್ಯವಿದೆ ಎಂದರು.
14
+ ಅರಣ್ಯ ಸಚಿವ ಈಶ್ವರ್ಖಂಡ್ರೆ ಮಾತನಾಡಿ, ಆನೆ-ಮಾನವ ಸಂಘರ್ಷ ಒಂದು ರಾಜ್ಯದ ಸಮಸ್ಯೆಯಲ್ಲ. ಜಾಗತಿಕ ಸಂಕೀರ್ಣ ಸಮಸ್ಯೆಯಾಗಿದೆ. ರಾಜ್ಯದಲ್ಲಿ 43,282 ಚ.ಕಿ.ಮೀ. ಅರಣ್ಯಪ್ರದೇಶವಿದ್ದು, ಒಟ್ಟು ಭೌಗೋಳಿಕ ಭೂಭಾಗದ 22 ರಷ್ಟು ಮಾತ್ರ ಹಸಿರು ಹೊದಿಕೆಯಿದೆ ಎಂದು ವಿವರಿಸಿದದರು.
15
+ ರಾಜ್ಯದಲ್ಲಿ ಕಳ್ಳಬೇಟೆ ನಿಗ್ರಹಕ್ಕೆ ಕ್ರಮ ಕೈಗೊಂಡಿದ್ದರಿಂದಾಗಿ ವನ್ಯಮೃಗಗಳ ಸಂಖ್ಯೆ ಹೆಚ್ಚಾಗಿದೆ. ಇದು ಮಾನವ ಮತ್ತು ವನ್ಯಮೃಗಗಳ ಸಂಘರ್ಷಕ್ಕೂ ಕಾರಣವಾಗಿದ್ದು, ಪ್ರತಿವರ್ಷ ಸರಾಸರಿ 30 ಜನ ಆನೆದಾಳಿಯಿಂದ ಸಾವಿಗೀಡಾಗಿದ್ದಾರೆ. ಈ ವರ್ಷ ಜನವರಿಯಿಂದ 25 ಜನ ಮೃತಪಟ್ಟಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
16
+ ವನ್ಯಜೀವಿಗಳ ಸಂಖ್ಯೆಗನುಗುಣವಾಗಿ ಅರಣ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕಳೆದ ವರ್ಷ 3995 ಹೆಕ್ಟೇರ್ ಅನ್ನು ಅರಣ್ಯ ಪ್ರದೇಶವೆಂದು ಘೋಷಿಸಲಾಗಿದೆ. 2500 ಎಕರೆ ಅರಣ್ಯ ಒತ್ತುವರಿಯನ್ನು ತೆರವು ಮಾಡಲಾಗಿದೆ. ಅರಣ್ಯ ಅಪರಾಧ ತಡೆಯಲು ಆನ್ಲೈನ್ ಎಫ್ಐಆರ್ ದಾಖಲು ಮಾಡಲಾಗುತ್ತಿದೆ. ಕಾಡ್ಗಿಚ್ಚು ನಂದಿಸಲು ದೂರ ಸಂವೇದಿ ತಂತ್ರಜ್ಞಾನ ಉಪಗ್ರಹಗಳ ನೆರವಿನಿಂದ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ವಿವರಿಸಿದರು.
17
+ ಕೇರಳದ ಅರಣ್ಯ ಸಚಿವ ಎ.ಕೆ.ಶಶಿಂದ್ರನ್, ತಮಿಳುನಾಡಿನ ಅರಣ್ಯ ಸಚಿವ ಮತಿವೆಂದನ್, ತೆಲಂಗಾಣದ ಅರಣ್ಯ ಸಚಿವೆ ಕೊಂಡಾ ಸುರೇಖ, ಜಾರ್ಖಂಡ್ನ ಅರಣ್ಯ ಸಚಿವ ಬೈದ್ಯನಾಥನ್, ಶಾಸಕ ಎ.ಎಸ್.ಪೊನ್ನಣ್ಣ ಮತ್ತಿತರರು ಉಪಸ್ಥಿತರಿದ್ದರು.
eesanje/url_46_47_5.txt ADDED
@@ -0,0 +1,10 @@
 
 
 
 
 
 
 
 
 
 
 
1
+ ರಾಜ್ಯದ ಅಣೆಕಟ್ಟೆಗಳ ಸುರಕ್ಷತೆಗೆ ತಜ್ಞರ ಸಮಿತಿ ರಚನೆ
2
+ ಬೆಂಗಳೂರು,ಆ.12-ತುಂಗಭದ್ರಾ ಅಣೆಕಟ್ಟೆಯ ಕ್ರಸ್ಟ್ಗೇಟ್ ಒಡೆದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟೆಗಳಲ್ಲೂ ಸುರಕ್ಷತಾ ಕ್ರಮಗಳ ಪರಿಶೀಲನೆಗಾಗಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಜಲಸಂಪನೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
3
+ ಸಿಎಂ ಸಿದ್ದರಾಮಯ್ಯನವರು ನಾಳೆ ಡ್ಯಾಂ ಪರಿಶೀಲನೆಗೆ ಭೇಟಿ ನೀಡಲಿದ್ದಾರೆ ಎಂದರು.ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ಗೇಟ್ ಒಡೆದುಹೋಗಿರುವ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆದಾರರ ಜೊತೆ ಚರ್ಚೆ ಮಾಡಿದ್ದೇವೆ. ವಿನ್ಯಾಸವನ್ನು ಕಳುಹಿಸಿಕೊಡಲಾಗಿದೆ. ನಾಲ್ಕೈದು ದಿನಗಳಲ್ಲೇ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
4
+ 50-60 ಟಿಎಂಸಿ ನೀರನ್ನು ಉಳಿಸಿ ರೈತರಿಗೆ ಒಂದು ಬೆಳೆಗೆ ನೀರು ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಅಧಿಕಾರಿಗಳ ಹಾಗೂ ತಂತ್ರಜ್ಞರ ಜೊತೆ ತಾವು ಚರ್ಚೆ ಮಾಡಿದ್ದು, ರೈತರು ಆತಂಕಗೊಳ್ಳುವ ಅಗತ್ಯವಿಲ್ಲ. ಆದರೆ ಅಣೆಕಟ್ಟಿ ಪರಿಸ್ಥಿತಿ ಅಪಾಯದಲ್ಲಂತೂ ಇತ್ತು ಎಂದರು.
5
+ ರಾಜ್ಯದ ಎಲ್ಲಾ ಡ್ಯಾಂಗಳನ್ನು ಖುದ್ದು ಪರಿಶೀಲಿಸಿ ವರದಿ ನೀಡಲು ಎರಡು ದಿನಗಳಲ್ಲಿ ತಂತ್ರಜ್ಞರ ಸಮಿತಿಯನ್ನು ರಚಿಸಲಾಗುವುದು. ಬಹುತೇಕ ಎಲ್ಲಾ ಡ್ಯಾಂಗಳಲ್ಲೂ ಎರಡು ಹಂತದ ಸುರಕ್ಷತಾ ಕ್ರಮಗಳಿರುತ್ತವೆ.
6
+ ತುಂಗಭದ್ರಾ ಡ್ಯಾಂನಲ್ಲಿ ಒಂದೇ ಹಂತದ ಸರಪಳಿ ಇದ್ದು, ಅದು ತುಂಡಾಗಿದೆ. ಅಲ್ಲಿನ ಪರಿಸ್ಥಿತಿ ನೋಡಿ, ಆಗ ನೀರಿನ ರಭಸ ಕಂಡು ನನಗೂ ಆತಂಕವಾಗಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಾದಷ್ಟು ನೀರನ್ನು ಉಳಿಸಿ ತುರ್ತು ದುರಸ್ತಿ ಕಾರ್ಯ ಕೈಗೊಳ್ಳಲು ಆದೇಶಿಸಲಾಗಿದೆ.
7
+ ಉತ್ತಮ ಗುಣಮಟ್ಟದ ಕಬ್ಬಿಣ ನೀಡಲು ಜೆಎಸ್ಡಬ್ಲ್ಯೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಈ ಮೊದಲು ಕ್ರಸ್ಟ್ಗೇಟ್ ಮಾಡಿದವರಿಗೆ ವಿನ್ಯಾಸ ಹಾಗೂ ಆದೇಶ ನೀಡಲಾಗಿದೆ. ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಪ ಮಾಡುವವರು, ಟೀಕೆ ಮಾಡುವವರು ಮಾಡುತ್ತಲೇ ಇರುತ್ತಾರೆ.
8
+ ತುಂಗಭದ್ರಾ ಅಣೆಕಟ್ಟು ರಾಜ್ಯಸರ್ಕಾರದ ನಿಯಂತ್ರಣದಲ್ಲಿಲ್ಲ. ನಾವು ನಿಯಂತ್ರಣ ಸಮಿತಿಯ ಸದಸ್ಯರಷ್ಟೇ. ಬೀಗ ಅವರ ಕೈಯಲ್ಲೇ ಇದೆ. ಆದರೂ ಡ್ಯಾಂ ನಮದೇ. ನೆರೆಯ ಆಂಧ್ರಪ್ರದೇಶಕ್ಕೆ ಮೂರು ಲಕ್ಷ ಹೆಕ್ಟೇರ್ಗೆ ಮಾತ್ರ ನೀರು ಪೂರೈಸಲಾಗುತ್ತಿದೆ. ಅತೀ ಹೆಚ್ಚು ನೀರಾವರಿಯನ್ನು ನಾವು ಬಳಸಿಕೊಳ್ಳುತ್ತೇವೆ. ಹೀಗಾಗಿ ತಮ ಜವಾಬ್ದಾರಿ ಇದೆ. ಕ್ರಸ್ಟ್ಗೇಟ್ ಅನ್ನು ದುರಸ್ತಿ ಮಾಡಿಸುತ್ತೇವೆ ಎಂದರು.
9
+ ಬಿಜೆಪಿಯ ಪ್ರತ್ಯೇಕ ಬಣ ನಡೆಸುವ ಪಾದಯಾತ್ರೆಗೆ ಯಶಸ್ಸು ದೊರೆಯಲಿ ಎಂದು ಡಿ.ಕೆ.ಶಿವಕುಮಾರ್ ಹಾರೈಸಿದರು.ಬೆಂಗಳೂರಿನಲ್ಲಿ ಕೆರೆಗಳು ತುಂಬಿಲ್ಲ. ಹೀಗಾಗಿ ಇನ್ನಷ್ಟು ಮಳೆ ಬರುವ ಅಗತ್ಯವಿದೆ. ಈಗ ಸುರಿಯುತ್ತಿರುವ ಮಳೆ ಸಾಲುವುದಿಲ್ಲ.
10
+ ಅಪಾರ್ಟ���ಮೆಂಟ್ಗಳಿಗೆ ನೀರು ನುಗ್ಗಿದ್ದರೆ ಅದನ್ನು ಸರಿ ಮಾಡಬಹುದು. ಆದರೆ ಮತ್ತಷ್ಟು ಮಳೆ ಬರಬೇಕು, ಅಂತರ್ಜಲ ಹೆಚ್ಚಬೇಕು. ರಾಮನಗರ, ಚೆನ್ನಪಟ್ಟಣ, ಕನಕಪುರ, ಮಾಗಡಿ, ತುಮಕೂರು, ಕೋಲಾರ, ಕುಣಿಗಲ್ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿಲ್ಲ. ಅಣೆಕಟ್ಟು ಭಾಗದಲ್ಲಿ ಮಳೆಯಾಗಿದೆ. ಜಲಾಶಯಗಳಿಗೆ ನೀರು ಬಂದಿದೆ ಎಂದು ಹೇಳಿದರು.
eesanje/url_46_47_6.txt ADDED
@@ -0,0 +1,6 @@
 
 
 
 
 
 
 
1
+ ಟಿಬಿ ಡ್ಯಾಮ್ ಡ್ಯಾಮೇಜ್ : ನಿನ್ನೆಯಿಂದ ಇಲ್ಲಿಯವರೆಗೆ 13 ಟಿಎಂಸಿ ನೀರು ಖಾಲಿ
2
+ ಕೊಪ್ಪಳ,ಆ.12-ಜಿಲ್ಲೆಯ ಮುನಿರಾಬಾದ್ ಸಮೀಪ ಇರುವ ತುಂಗಾಭದ್ರಾ ಜಲಾಶಯದ ಬಳಿಯಿರುವ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ನಿನ್ನೆಯಿಂದ ಇಲ್ಲಿಯವರೆಗೆ 13 ಟಿಎಂಸಿ ನೀರು ಡ್ಯಾಂನಿಂದ ಹರಿದು ಹೋಗಿದೆ.
3
+ ಡ್ಯಾಂನಿಂದ ಇಂದು ಕೂಡ ನದಿಗೆ 1.5 ಲಕ್ಷ ಕ್ಯೂಸೆಕ್‌್ಸ ನೀರನ್ನು ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.
4
+ ಕ್ರಸ್ಟ್ಗೇಟ್ ದುರಸ್ತಿ ಮಾಡಲು ಜಲಾಶಯದಲ್ಲಿರುವ ನೀರನ್ನು ಹಂತವಾಗಿ ಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮುಂದಾಗಿದ್ದಾರೆ. ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದ ಜನ ಸುರಕ್ಷಿತವಾಗಿರುವಂತೆ ಡಂಗೂರ ಸಾರಿ ಎಚ್ಚರಿಕೆ ನೀಡಲಾಗುತ್ತಿದೆ.
5
+ ಯಾವುದೇ ಕಾರಣಕ್ಕೂ ನದಿ ಇಳಿಯದಂತೆ, ಮೀನುಗಾರಿಕೆ ಮಾಡದಂತೆ, ನದಿ ಸಮೀಪ ಮಕ್ಕಳನ್ನು ಕಳುಹಿಸದಂತೆ ಜಾನುವಾರುಗಳು ಹೋಗದಂತೆ ಎಚ್ಚರ ವಹಿಸಿ ಎಂದು ಸೂಚನೆ ನೀಡಲಾಗಿದೆ. ಟಿಬಿ ಡ್ಯಾಂ ಕೆಳಭಾಗದ ಕೊಪ್ಪಳ ತಾಲ್ಲೂಕು, ಗಂಗಾವತಿ ತಾಲ್ಲೂಕು, ಕಾರಟಗಿ ತಾಲ್ಲೂಕಿನ ಗ್ರಾಮಗಳಲ್ಲಿ ಡಂಗೂರ ಸಾರಿಸಿ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.
6
+ ಸಂಚಾರ ನಿಷೇಧಡ್ಯಾಂ ಸುತ್ತಮುತ್ತಲಿನ ಪ್ರದೇಶಕ್ಕೆ ಸಂಚಾರ ನಿಷೇಧ ಮಾಡಲಾಗಿದೆ. ತುಂಗಾಭದ್ರಾ ಸೇತುವೆ ನೋಡಲು ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಜನ ಬರುತ್ತಾರೆ. ಸೇತುವೆ ಮೇಲೆ ನಿಂತು ಹುಚ್ಚಾಟ ಮೆರೆಯುತ್ತಾರೆ. ಭಾರಿ ಪ್ರಮಾಣದಲ್ಲಿ ನೀಡನ್ನು ಹೊರಬಡುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂ ಸುತ್ತಮುತ್ತ ಸಂಚಾರ ನಿಷೇಧ ವಿಧಿಸಲಾಗಿದೆ.
eesanje/url_46_47_7.txt ADDED
@@ -0,0 +1,6 @@
 
 
 
 
 
 
 
1
+ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ
2
+ ಬೆಂಗಳೂರು,ಆ.12-ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಫ್ರೀಡಂಪಾರ್ಕ್‌ನಲ್ಲಿಂದು ಸಾವಿರಾರು ಶಿಕ್ಷಕರು ಪ್ರತಿಭಟನೆ ನಡೆಸಿದರು. ಶಿಕ್ಷಕರು ಶಾಲೆಗಳನ್ನು ತೊರೆದು ಪ್ರತಿಭಟನೆಗೆ ಆಗಮಿಸಿದ ಹಿನ್ನಲೆಯಲ್ಲಿ ಸರ್ಕಾರಿ ಶಾಲೆಗಳ ತರಗತಿಗಳಲ್ಲಿ ವ್ಯತ್ಯಯವಾಯಿತು.
3
+ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ಸೇರಿದಂತೆ ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಸರ್ಕಾರ 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ ಮೂಲತಃ 1ರಿಂದ 7 ಮತ್ತು 8ನೇ ತರಗತಿಗೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌‍ಟಿ ಎಂದು ಪದನಾಮ ಮಾಡಿ 1ರಿಂದ 5ಕ್ಕೆ ಹಿಂಬಡ್ತಿ ನೀಡಿದೆ.
4
+ ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕೆಂದು ಪ್ರತಿಭಟನಾನಿರತ ಶಿಕ್ಷಕರು ಆಗ್ರಹಿಸಿದ್ದಾರೆ. 2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲಾ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜ್ಯೇಷ್ಠತೆಯೊಂದಿಗೆ ಪುನರ್‌ ಪದನಾಮಕರಣ ಮಾಡಬೇಕು.
5
+ ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿಎಡ್‌ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು.
6
+ ಈ ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೆ ಅಖಂಡ ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆಗೆ ಇಳಿದಿದ್ದಾರೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಬೇಡಿಕೆಗಳ ಕುರಿತು ನಡೆಸಿದ ಸಭೆ ವಿಫಲವಾದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
eesanje/url_46_47_8.txt ADDED
@@ -0,0 +1,5 @@
 
 
 
 
 
 
1
+ ಮಳೆಗಾಲದಲ್ಲಿ ಫ್ಲೆಕ್ಸ್ ಅವಘಡಗಳಾಗದಂತೆ ನೋಡಿಕೊಳ್ಳಿ : ಹೈಕೋರ್ಟ್‌ ಸೂಚನೆ
2
+ ಬೆಂಗಳೂರು,ಆ.12-ಮಳೆಗಾಲದಲ್ಲಿ ಫ್ಲೆಕ್ಸ್ ನಿಂದ ಅವಘಡಗಳಾಗದಂತೆ ತಡಗಟ್ಟಬೇಕು, ಫುಟ್ಪಾತ್‌ ಹಾಗೂ ಜನಸಂದಣಿ ಇರುವೆಡೆ ಫ್ಲೆಕ್ಸ್ ಅಳವಡಿಸದಂತೆ ಎಚ್ಚರಿಕೆ ವಹಿಸಬೇಕೆಂದು ಹೈಕೋರ್ಟ್‌ ವಿಭಾಗೀಯ ಪೀಠ ಬಿಬಿಎಂಪಿ ಮತ್ತು ಪೊಲೀಸ್‌‍ ಇಲಾಖೆಗೆ ಸೂಚನೆ ನೀಡಿದೆ.
3
+ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ಮತ್ತು ಹೋರ್ಡಿಂಗ್ಸ್ ಹಾವಳಿ ಹಿನ್ನಲೆಯಲ್ಲಿ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ನಡೆದ ಪಿಐಎಲ್‌ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌ ವಿಭಾಗೀಯ ಪೀಠ, ಅಕ್ರಮ ಜಾಹಿರಾತು ಫಲಕಗಳು ಅಳವಡಿಸದಂತೆ ಅಧಿಕಾರಿಗಳು ನಿಗಾವಹಿಸಬೇಕು. ಈ ಬಗ್ಗೆ ಬಿಬಿಎಂಪಿ ಹಾಗೂ ಪೊಲೀಸ್‌‍ ಇಲಾಖೆಗೆ ಸೂಚನೆ ನೀಡಿದೆ.
4
+ ಮಳೆಗಾಲದ ಸಂದರ್ಭದಲ್ಲಿ ಫ್ಲೆಕ್ಸ್ ಗಳಿಂದ ಅವಘಡಗಳಾಗುವ ಸಂಭವವಿರುತ್ತದೆ. ಫುಟ್ಪಾತ್‌ ಮತ್ತು ಜನಸಂಚಾರ ಇರುವ ಕಡೆ ಫ್ಲೆಕ್‌್ಸ ಅಳವಡಿಸದಂತೆ ಹೈಕೋರ್ಟ್‌ ಸೂಚಿಸಿದೆ.
5
+ ಈ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿತು. ಮುಂದಿನ 15 ದಿನಗಳಲ್ಲಿ ಜಾಹಿರಾತು ನೀತಿ ಅನುಷ್ಠಾನಗೊಳಿಸಲಾಗುವುದು ಎಂದು ಹೈಕೋರ್ಟ್‌ಗೆ ಸರ್ಕಾರದ ಪರ ಎಎಜಿ ಪ್ರತಿಮಾ ಹೊನ್ನಾಪುರ್‌ ಅವರು ಮಾಹಿತಿ ನೀಡಿದರು.
eesanje/url_46_47_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ : ಸಿ.ಪಿ.ಯೋಗೇಶ್ವರ್‌
2
+ ಬೆಂಗಳೂರು,ಆ.12-ಒಂದು ವೇಳೆ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಬಿಜೆಪಿ ವತಿಯಿಂದ ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿಕೆ ನೀಡಿದ್ದಾರೆ.
3
+ ಈ ಮೂಲಕ ಪಕ್ಷವು ಟಿಕೆಟ್‌ ನೀಡದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುನ್ಸೂಚನೆ ಕೊಟ್ಟಿದ್ದು, ಅವರ ನಡೆ ಬಿಜೆಪಿ ಹಾಗೂ ಜೆಡಿಎಸ್‌‍ಗೆ ದೊಡ್ಡ ತಲೆನೋವಾಗುವ ಸಂಭವವಿದೆ.
4
+ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಪಚುನಾವಣೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದು ಸೂಚ್ಯವಾಗಿ ತಿಳಿಸಿದರು.
5
+ ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ. ನಾನು ಕಾಂಗ್ರೆಸ್‌‍ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಎಂದು ಗೊತ್ತಿದೆ ಎಂದು ಹೇಳಿದರು.
6
+ ನನಗೂ ಕುಮಾರಸ್ವಾಮಿಯವರಿಗೂ ಭಿನ್ನಾಭಿಪ್ರಾಯ ಏನಿದೆ? ನಮ ಮಧ್ಯೆ ಬಿರುಕು ಮೂಡಿಸುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಮನಸ್ಸು ಬದಲಾಯಿಸಬಹುದು. ಕುಮಾರಸ್ವಾಮಿ ಒಪ್ಪದಿದ್ದರೆ ಮುಂದಿನ ದಾರಿ ನೋಡೋಣ ಎಂದು ತಿಳಿಸಿದರು.
7
+ ಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಅಲ್ಲಿ ಸ್ಪರ್ಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನ ಮನಸ್ಕರು ಸಭೆ ಸೇರಿದ್ದೇವೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್‌‍ಗೆ ಬಿಟ್ಟು ಕೊಡಬಾರದು. ಆ ಕ್ಷೇತ್ರವನ್ನು ಎನ್‌ಡಿಎ ವಶಕ್ಕೆ ತಗೊಳ್ಳಬೇಕು ಎಂದು ನಿರ್ಣಯಿಸಿದ್ದೇವೆ.
8
+ ಇದೇ ಕಾರಣಕ್ಕೆ ನಾನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮನಸ್ಸು ಮಾಡಿದ್ದೇನೆ. ಅದಕ್ಕಾಗಿ ಇಂದು ದಿಲ್ಲಿಗೆ ತೆರಳುತ್ತಿದ್ದೇನೆ. ಅಲ್ಲಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ. ಆಗಸ್ಟ್‌ 16ರಂದು ಮತ್ತೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುವ ಯೋಜನೆಯೂ ಇದೆ ಎಂದು ಯೋಗೇಶ್ವರ್‌ ತಿಳಿಸಿದ್ದಾರೆ.
9
+ ಈಗಾಗಲೇ ನಮ ರಾಜ್ಯ ನಾಯಕರು ಕೂಡ ನನ್ನ ಸ್ಪರ್ಧೆಯ ಬಗ್ಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮುಂಗೋಪ ಅಷ್ಟೇ. ಆದರೆ ಅಂತಿಮವಾಗಿ ಅವರ ಜತೆ ವರಿಷ್ಠರು ಮಾತಾಡಿದ ಬಳಿಕ ನನ��ನ ಸ್ಪರ್ಧೆಗೆ ಅವರೂ ಒಪ್ಪಿಗೆ ಸೂಚಿಸುವ ಭರವಸೆ ಇದೆ.
10
+ ಕಳೆದ ಬಾರಿ ಮೈತ್ರಿ ಮಾಡಿಕೊಳ್ಳುವಂತೆ ಹೇಳಿದವನೇ ನಾನು. ಬಿಜೆಪಿ ಮೈತ್ರಿ ಮಾಡಿಕೊಳ್ಳದಿದ್ದರೆ ನಮ ಭಾಗದಲ್ಲಿ ಜೆಡಿಎಸ್‌‍ ಕಥೆ ಏನಾಗುತ್ತಿತ್ತು? ಹೀಗಾಗಿ ಎರಡು ಪಕ್ಷಗಳ ಒಮತದ ಅಭ್ಯರ್ಥಿ ನಾನೇ ಆಗುವ ವಿಶ್ವಾಸ ಇದೆ ಎಂದು ಅವರು ಹೇಳಿದ್ದಾರೆ.
eesanje/url_46_48_1.txt ADDED
@@ -0,0 +1,8 @@
 
 
 
 
 
 
 
 
 
1
+ ಕೇಂದ್ರ ಹಾಗೂ ರಾಜ್ಯಸರ್ಕಾರದ ನಡೆಯಿಂದ ಮಲೆನಾಡಿಗರು ಅತಂತ್ರ
2
+ ಶೃಂಗೇರಿ,ಆ.12-ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರನ್ನು ನಿದ್ದೆಗೆಡಿಸಿದೆ, ಮಲೆನಾಡಿನ ಜಿಲ್ಲೆಗಳ ಸಂಸದರು, ಶಾಸಕರು ಒಗ್ಗಟ್ಟಾಗಿ ಹೋರಾಟಕ್ಕೆ ಮುಂದಾಗಬೇಕೆಂದು ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್‌ ಹೊಸಕೊಪ್ಪ ಒತ್ತಾಯಿಸಿದ್ದಾರೆ.
3
+ ಶೃಂಗೇರಿ ಪ್ರವಾಸಿ ಮಂದಿರದಲ್ಲಿ ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದವರು ನಿನ್ನೆ ಆಯೋಜಿಸಿದ್ದ ಮುಂದಿನ ಹೋರಟದ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಾರಕ ಅರಣ್ಯ ಕಾಯ್ದೆಯಿಂದ ಮಲೆನಾಡು ಹಾಗೂ ಕರಾವಳಿಯ ಕೃಷಿಕರು ಭಯದ ವಾತಾವರಣದಲ್ಲಿ ಬದುಕನ್ನು ನಡೆಸುತ್ತಿದ್ದರು.
4
+ ಇತ್ತೀಚಿಗೆ ಸದನದಲ್ಲಿ ಅರಣ್ಯವಾಸಿಗಳ ಬಗ್ಗೆ ತೆಗೆದುಕೊಂಡ ನಿರ್ಣಯದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದರು.ಆದರೆ ಅತಿಯಾದ ಮಳೆಯಿಂದ ಆಗುವ ಅನಾಹುತಗಳಾಗುವುದಕ್ಕೆ ಮಲೆನಾಡಿಗರೇ ಕಾರಣ ಎಂದು ಹೇಳುವ ರಾಜ್ಯ ಸರ್ಕಾರದ ಸಚಿವರು ಮತ್ತು ಅಧಿಕಾರಿಗಳ ಹೇಳಿಕೆಗಳ ಜೊತೆಗೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಅರಣ್ಯ ಪ್ರದೇಶ ಎಂದು ಘೋಷಿಸಲು ಕರಡು ಪ್ರತಿ ಸಿದ್ದಪಡಿಸಿದ್ದು ಮತ್ತೆ ಮಲೆನಾಡಿಗರನ್ನು ಅತಂಕಕ್ಕೆ ಸಿಲುಕಿಸಿದ್ದಾರೆ ಎಂದು ಆಕೋಶ ವ್ಯಕ್ತಪಡಿಸಿದರು.
5
+ ಅತಿಯಾದ ಮಳೆಯಿಂದ ಪ್ರಕೃತಿ ವಿಕೋಪಕ್ಕೆ ಮಲೆನಾಡಿನ ಜನರು ನೇರ ಹೊಣೆಯಲ್ಲ. ಅವರ ಬದುಕಿಗಾಗಿ ಮಾಡಿಕೊಂಡ ಒತ್ತುವರಿಯಿಂದ ಭೂಕುಸಿತ ಉಂಟಾಗಿಲ್ಲ ಬದಲಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವೈಜ್ಞಾನಿಕವಾಗಿ ನಿರ್ಮಿಸಿದ ರಾಷ್ಟ್ರೀಯ ಹೆದ್ದಾರಿ, ಅಣೆಕಟ್ಟುಗಳು, ಸೇತುವೆಗಳಿಂದ ಅತಿ ಹೆಚ್ಚು ಭೂಕುಸಿತ ಸಂಭವಿಸಿದೆ ವಿನಃ ಯಾವುದೇ ಕೃಷಿ ಚಟುವಟಿಕೆಗಳಿಂದ ಅಲ್ಲ. ಮೊದಲು ರಾಷ್ಟ್ರೀಯ ಹೆದ್ದಾರಿ, ಅಣೆಕಟ್ಟುಗಳನ್ನ, ರಸ್ತೆ ಬದಿಯಲ್ಲಿರುವ ಪೈಪ್‌ಲೈನ್‌ಗಳನ್ನೂ ತೆರವು ಮಾಡಿ. ಅವುಗಳನ್ನು ತೆರವು ಮಾಡಲು ನಿಮಿಂದ ಸಾಧ್ಯವೇ? ಎಂದು ಪ್ರಶ್ನಿಸಿದರು.
6
+ ಕ್ಷೇತ್ರ ರೈತ ಸಂಘದ ಅಧ್ಯಕ್ಷ ನವೀನ್‌ ಕರುವಾನೆ ಮಾತನಾಡಿ, ಒತ್ತುವರಿ ತೆರವು ಮಾಡುತ್ತೇವೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿಕೆ ನೀಡಿರುವುದನ್ನು ಜಾರಿಗೆ ತರಲು ನಮ ಮಲೆನಾಡಿಗರು ಬಿಡುವುದಿಲ್ಲ. ರಾಜ್ಯ ಸರ್ಕಾರದಷ್ಟೇ ಜವಾಬ್ದಾರಿ ಕೇಂದ್ರ ಸರ್ಕಾರಕ್ಕೆ ಇದೆ. ಆದರಿಂದ ಈ ನಿರ್ಣಯವನ್ನು ನಮ ಮಲೆನಾಡಿನ 5 ಜನ ಸಂಸದರು ಬೆಂಬಲಿಸಿ ಮಲೆನಾಡಿಗರ ಬದುಕು ಉಳಿಸಿಕೊಡಬೇಕು.
7
+ ಇದುವರೆಗೂ ನಮ ಯಾವ ಸಂಸದರು ಅರಣ್ಯ ಹಕ್ಕಿನ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ನಮ ಸಂಸದರಾದ ಕೋಟಾ ಶ್ರೀನಿವಾಸ್‌‍ ಪೂಜಾರಿಯವರು ಮಲೆನಾಡಿನ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿ ಮಲೆನಾಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರು.
8
+ ಸಭೆಯಲ್ಲಿ ಮೂಲ ಅರಣ್ಯ ಕಾಯ್ದೆಯನ್ನು ತಿದ್ದು���ಡಿ ಮಾಡಲು ಕೇಂದ್ರ ಹಾಗು ರಾಜ್ಯ ಸರ್ಕಾರಕ್ಕೆ ಒತ್ತಡ ತರುವ ವಿಚಾರದ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಪದಾಧಿಕಾರಿಗಳಾದ ಕಣದಮನೆ ಜಗದೀಶ್‌, ತ್ರಿಮೂರ್ತಿ, ಕಾಳ್ಯ ಸಂತೋಷ್‌, ಮಂಜುನಾಥ್‌ ಮೂಡ್ಲು, ಗುತ್ತುಳಿಕೆ ಕೇಶವ, ರಾಜ್ಕುಮಾರ್‌ ಹೆಗ್ಡೆ, ಅವಿನಾಶ್‌, ಪ್ರಶಾಂತ್‌ ಬಂಡ್ಲಪುರ, ಆದೇಶ, ಚೇತನ್‌ ಹಿಂಬ್ರವಳ್ಳಿ, ಶುಭಕೃತ್‌ ಹೆಗ್ಡೆ, ಶಶಿಕ್‌ ಹೊಸಕೋಪ್ಪ , ಸುಬ್ರಮಣ್ಯ ಹರವರಿ ಉಪಸ್ಥಿತರಿದ್ದರು.
eesanje/url_46_48_10.txt ADDED
@@ -0,0 +1,8 @@
 
 
 
 
 
 
 
 
 
1
+ ಸಿಎಂ ಬದಲಾಗ್ತಾರೆ ಅಂತ ಯಾವ ಕಾಂಗ್ರೆಸ್‌‍ ನಾಯಕರೂ ಹೇಳಿಲ್ಲ : ಗೃಹಸಚಿವ ಪರಮೇಶ್ವರ್‌
2
+ ಬೆಂಗಳೂರು,ಆ.11– ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾಗುತ್ತಾರೆ ಎಂದು ಕಾಂಗ್ರೆಸ್‌‍ನ ಯಾವ ನಾಯಕರೂ ಹೇಳಿಲ್ಲ. ಆ ರೀತಿಯ ಚರ್ಚೆಗಳು ಅಪ್ರಸ್ತುತ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಅವರು ಬದಲಾಗುವುದಿಲ್ಲ ಎಂಬ ವ್ಯಾಖ್ಯಾನಗಳ ಕುರಿತು ಪ್ರತಿಕ್ರಿಯಿಸಿದರು.
3
+ ನಮ ಪಕ್ಷದ ಯಾವ ನಾಯಕರೂ ಈ ಬಗ್ಗೆ ಹೇಳಿಕೆ ನೀಡಿಲ್ಲ. ಬಿಜೆಪಿ-ಜೆಡಿಎಸ್‌‍ನ ನಾಯಕರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆ ರೀತಿಯ ಚರ್ಚೆಗಳೇ ಅನಗತ್ಯ ಎಂದು ಹೇಳಿದರು.ರಾಜ್ಯಪಾಲರು ಮುಖ್ಯಮಂತ್ರಿಯವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಬಾರದು. ಈ ಕುರಿತು ದಾಖಲಾಗಿರುವ ದೂರನ್ನು ತಿರಸ್ಕರಿಸಬೇಕು ಮತ್ತು ಶೋಕಾಸ್‌‍ ನೋಟೀಸ್‌‍ ಅನ್ನು ಹಿಂಪಡೆಯಬೇಕು ಎಂದು ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಸಲಹೆ ನೀಡಿದೆ.
4
+ ಅದರ ಹೊರತಾಗಿಯೂ ಅವರು ಮುಂದುವರೆದರೆ ನಮಗೂ ಕಾನೂನು ಹೋರಾಟ ಅನಿವಾರ್ಯವಾಗಲಿದೆ. ಆದರೆ ರಾಜ್ಯಪಾಲರು ಕಾನೂನು ಬಿಟ್ಟು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಮಗೆ ಅನಿಸುವುದಿಲ್ಲ. ಕಾನೂನಿನ ಪ್ರಕಾರ ನಡೆದುಕೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.
5
+ ಸಂಸತ್‌ ಅಧಿವೇಶನ ಮುಗಿದ ಬಳಿಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡುತ್ತಾರೆ ಎಂಬ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್‌, ರಾಜ್ಯಪಾಲರು ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ. ನ್ಯಾಯಯುತವಾಗಿ ನಿರ್ಧಾರ ತೆಗೆದುಕೊಂಡರೆ ಒಪ್ಪಿಕೊಳ್ಳುತ್ತೇವೆ. ಇಲ್ಲದೇ ಹೋದರೆ ಕಾನೂನು ಹೋರಾಟ ಅನಿವಾರ್ಯವಾಗಲಿದೆ ಎಂದರು.
6
+ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಫೋಕ್ಸೊ ಪ್ರಕರಣಕ್ಕೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಅಭಿಯೋಜಕರು ಮೇಲನವಿ ಸಲ್ಲಿಸಿದ್ದಾರೆ. ಮುಂದಿನ ವಿಚಾರಣೆಯಲ್ಲಿ ಅಡ್ವಕೇಟ್‌ ಜನರಲ್‌ ಅಥವಾ ಯಾರು ಹಾಜರಾಗುತ್ತಾರೆ ಎಂಬುದನ್ನು ಆಧರಿಸಿ ರಾಜ್ಯಸರ್ಕಾರದ ಪರವಾಗಿ ಸಮರ್ಥ ವಾದ ಮಂಡಿಸಲಾಗುವುದು ಎಂದು ಹೇಳಿದರು.
7
+ ಫೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳಿಗೆ ಸಾಮಾನ್ಯವಾಗಿ ಜಾಮೀನು ದೊರೆಯುವುದಿಲ್ಲ. ಆದರೆ ನ್ಯಾಯಾಧೀಶರು ಕೊಟ್ಟಿದ್ದಾರೆ. ರಾಜ್ಯಸರ್ಕಾರದ ಪರವಕೀಲರು ನ್ಯಾಯಾಲಯದ ಮುಂದೆ ಸತ್ಯಾಸತ್ಯತೆಗಳನ್ನು ವಿವರಿಸಲಿದ್ದಾರೆ. ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಲಾಗುವುದು ಎಂದರು.
8
+ ಕೆನೆಪದರ ಮೀರಿದವರನ್ನು ಮೀಸಲಾತಿಯಿಂದ ಹೊರಗಿಡುವಂತಹ ನಿರ್ಣಯ ಮಾಡುವಂತೆ ಬಿಜೆಪಿ ಸಂಸದರ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿ���ವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನ್ನ ಅಭಿಪ್ರಾಯಗಳು ಏನೇ ಇದ್ದರೂ ಅದು ವೈಯಕ್ತಿಕ. ಎಐಸಿಸಿ ಚರ್ಚೆ ಮಾಡಿ ತೆಗೆದುಕೊಳ್ಳುವ ನಿರ್ಧಾರಗಳು ಅದರ ಆಧಾರದ ಮೇಲೆ ರಾಜ್ಯ ಘಟಕಕ್ಕೆ ನೀಡುವ ನಿರ್ದೇಶನಗಳು ಮುಖ್ಯವಾಗುತ್ತದೆ. ನಂತರ ನಾವು ಪ್ರತಿಕ್ರಿಯೆ ನೀಡುತ್ತೇವೆ ಎಂದು ತಿಳಿಸಿದರು.
eesanje/url_46_48_11.txt ADDED
@@ -0,0 +1,5 @@
 
 
 
 
 
 
1
+ ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಅತೃಪ್ತರ ಗುಪ್ತ ಸಭೆ, ಪ್ರತ್ಯೇಕ ಹೋರಾಟಕ್ಕೆ ಪ್ಲಾನ್
2
+ ಬೆಳಗಾವಿ,ಆ.11-ಕಾಂಗ್ರೆಸ್‌‍ ವಿರುದ್ಧ ಬಿಜೆಪಿ-ಜೆಡಿಎಸ್‌‍ ನಡೆಸಿದ ಪಾದಯಾತ್ರೆ ಬೆನ್ನಲ್ಲೇ ಪಾದಯಾತ್ರೆಯಲ್ಲಿ ಭಾಗವಹಿಸದ ಬಿಜೆಪಿಯ ಹಿರಿಯ ನಾಯಕರು ರಹಸ್ಯ ಸಭೆ ನಡೆಸಿದ್ದಾರೆ. ಬಿಜೆಪಿ ಹಿರಿಯ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ನಗರ ಖಾಸಗಿ ಹೋಟೆಲೊಂದರ ಅತೃಪ್ತರ ಗುಪ್ತ ಸಭೆ ನಡೆದಿದ್ದು, ಅಪ್ಪ-ಮಕ್ಕಳ ಪಕ್ಷದ ಹಿಡಿತದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
3
+ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಅವರು ಬಿಜೆಪಿಯೊಳಗಿನ ಅತೃಪ್ತರನ್ನು ಈಗಾಗಲೇ ಒಟ್ಟುಗೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.ಒಪ್ಪಂದದ ರಾಜಕೀಯ ಮಾಡುತ್ತಿರುವ ಬಿಎಸ್‌‍ವೈ, ಬಿ.ವೈ.ವಿಜಯೇಂದ್ರ ಹಾಗೂ ಅಶೋಕ್‌ರವರ ನಡೆ ಖಂಡಿಸಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳದೇ ಹಿಂದೆ ಸರಿದಿದ್ದರು. ಬೆಳಗಾವಿ ಜಿಲ್ಲೆಯ ಯಾವ ನಾಯಕರೂ ಸಹ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ. ಬಾಲಚಂದ್ರ ಜಾರಕಿಹೊಳಿ ಸಹ ಅಂತರ ಕಾಯ್ದುಕೊಂಡಿದ್ದರು.
4
+ ಈಗ ಅತೃಪ್ತ ನಾಯಕರು ಸಭೆ ನಡೆಸಿದ್ದು, ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ವಾಲ್ಮೀಕಿ ಹಗರಣದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ. ಯತ್ನಾಳ್‌ ನೇತೃತ್ವದಲ್ಲಿ ಮತ್ತೊಂದು ತಂಡ ಸಕ್ರಿಯವಾಗುತ್ತಿದೆ ಎನ್ನಲಾಗಿದೆ.
5
+ ಬಿಜೆಪಿಯ ಬಲಾಢ್ಯ ನಾಯಕರಿಗೆ ಈ ಗುಂಪಿನ ಕಾರ್ಯಚಟುವಟಿಕೆಗಳು ನುಂಗಲಾರದ ತುತ್ತಾಗಿವೆ. ಉತ್ತರ ಕರ್ನಾಟಕದ ಪ್ರಮುಖ ನಾಯಕರು ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರೂ ಹಲವು ಜನ ನಾಯಕರು ಯತ್ನಾಳ್‌ ಅವರ ಹಿಂದೆ ಇರುವುದು ಸ್ಪಷ್ಟವಾಗಿದೆ.ನಿನ್ನೆ ಯತ್ನಾಳ್‌, ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
eesanje/url_46_48_12.txt ADDED
@@ -0,0 +1,9 @@
 
 
 
 
 
 
 
 
 
 
1
+ ಜೆಡಿಎಸ್‌‍-ಬಿಜೆಪಿ ಪಾದಯಾತ್ರೆಯಿಂದ ಮತ್ತಷ್ಟು ಗಟ್ಟಿಯಾಯ್ತು ಸಿದ್ದರಾಮಯ್ಯ ಸಿಎಂ ಕುರ್ಚಿ
2
+ ಬೆಂಗಳೂರು,ಆ.11– ವಿಪಕ್ಷ ಜೆಡಿಎಸ್‌‍ ಮತ್ತು ಬಿಜೆಪಿ ಪಾದಯಾತ್ರೆ ಹೋರಾಟಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯನ್ನು ಮತ್ತಷ್ಟು ಗಟ್ಟಿಗೊಳಿಸಿವೆ.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಬಳಸಿ ಲೋಪವೆಸಗಿದ್ದಾರೆ. ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸಿದ್ದವು. ಇದು ಕಾಂಗ್ರೆಸ್‌‍ ಪಕ್ಷಕ್ಕೆ ಮುಜುಗರ ಉಂಟುಮಾಡಬಹುದು, ಸಿದ್ದರಾಮಯ್ಯನವರಿಗೆ ಕಂಟಕವಾಗಲಿದೆ ಎಂಬ ವ್ಯಾಖ್ಯಾನಗಳಿದ್ದವು. ಆದರೆ ಪರಿಣಾಮ ಸಂಪೂರ್ಣ ವ್ಯತಿರಿಕ್ತವಾಗಿದೆ.
3
+ ವಿಪಕ್ಷಗಳ ಹೋರಾಟಕ್ಕೆ ಕಾಂಗ್ರೆಸ್‌‍ ರಾಜಕೀಯವಾಗಿಯೇ ಉತ್ತರ ನೀಡಿದೆ. ಇಡೀ ಪಕ್ಷ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿರುವುದರಿಂದ ಕಾಂಗ್ರೆಸ್‌‍ ಒಳಗಿನ ಸಿದ್ದರಾಮಯ್ಯ ವಿರೋಧಿಗಳ ಬಾಯಿ ಕೂಡ ಬಂದ್‌ ಆದಂತಾಗಿದೆ.
4
+ ಪಾದಯಾತ್ರೆಗೆ ತಿರುಗೇಟು ನೀಡುವ ಸಲುವಾಗಿ ಕಾಂಗ್ರೆಸ್‌‍ ಒಂದು ದಿನ ಮೊದಲೇ ಐದು ಕಡೆ ಬೃಹತ್‌ ಸಮಾವೇಶಗಳನ್ನು ಆಯೋಜಿಸಿ ಆರಂಭದಿಂದ ಕೊನೆಯವರೆಗೂ ಇಂಚಿಂಚೂ ಬೆಳವಣಿಗೆಗಳನ್ನು ಜನರ ಮುಂದಿಟ್ಟಿರುವುದಲ್ಲದೆ, ಬಿಜೆಪಿ-ಜೆಡಿಎಸ್‌‍ ನಾಯಕರ ಭೂ ಹಗರಣಗಳನ್ನು ಬಯಲು ಮಾಡಿದೆ.
5
+ ಎಲ್ಲದಕ್ಕಿಂತಲೂ ಮುಖ್ಯವಾಗಿ ಕಾಂಗ್ರೆಸ್‌‍ ಪಕ್ಷದಲ್ಲಿ ಭರ್ಜರಿ ಒಗ್ಗಟ್ಟು ಪ್ರದರ್ಶನಗೊಂಡಿದ್ದು, ಸಿದ್ದರಾಮಯ್ಯ ಅವರ ಜೊತೆ ಎಲ್ಲಾ ನಾಯಕರೂ ದೃಢವಾಗಿ ಬೆಂಬಲಕ್ಕೆ ನಿಲ್ಲುವಂತ ಅನಿವಾರ್ಯತೆಯನ್ನು ಸೃಷ್ಟಿ ಮಾಡಿದೆ.
6
+ ಸಿದ್ದರಾಮಯ್ಯನವರು ಹೇಳಿಕೇಳಿ ಜನನಾಯಕರು. ಅವರಿಗೆ ಅವರದೇ ಆದಂತಹ ಮತಬ್ಯಾಂಕ್‌ ಇದೆ. ಕಾಂಗ್ರೆಸ್‌‍ ಹೊರತಾಗಿಯೂ ಸಿದ್ದರಾಮಯ್ಯ ಚುನಾವಣೆಯಲ್ಲಿ ಗೆಲ್ಲಬಲ್ಲರು ಮತ್ತು ಬಯಸಿದವರನ್ನು ಸೋಲಿಸಬಲ್ಲರು ಎಂಬ ಅಭಿಪ್ರಾಯಗಳು ಸಾರ್ವತ್ರಿಕ. ಈ ಹಿಂದೆ ಅಷ್ಟೇನೂ ಪ್ರಭಾವಿಯಾಗಿರದ ಕಾಲದಲ್ಲಿಯೂ ಎಬಿಪಿಜೆಡಿ ಅನ್ನು ಸ್ಥಾಪಿಸಿ ಜನತಾದಳದ ಸೋಲಿಗೆ ಮುನ್ನುಡಿ ಬರೆದಿದ್ದರು.
7
+ ಕಾಂಗ್ರೆಸ್‌‍ಗೆ ಬಂದು ಮುಖ್ಯಮಂತ್ರಿಯಾದ ಬಳಿಕ ತಮದೇ ಆದ ಹಿಂಬಾಲಕರನ್ನು ಸೃಷ್ಟಿಸಿಕೊಂಡಿರುವುದಲ್ಲದೆ ಅಧಿಕಾರದಲ್ಲಿ ಜಾರಿಗೆ ತಂದ ಕಾರ್ಯಕ್ರಮಗಳಿಂದಾಗಿ ಮತಬ್ಯಾಂಕ್‌ ಅನ್ನು ಕ್ರೂಢೀಕರಿಸಿಕೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್‌‍ ಪಕ್ಷಕ್ಕೆ ಸಿದ್ದರಾಮಯ್ಯ ಅನಿವಾರ್ಯ ಎಂಬ ಪರಿಸ್ಥಿತಿ ಉದ್ಭವಿಸಿದೆ.ಪಾದಯಾತ್ರೆ ಮೂಲಕ ಸಿದ್ದರಾಮಯ್ಯ ಅವರನ್ನು ಅಸ್ತಿರಗೊಳಿಸಬಹುದು ಎಂಬ ಲೆಕ್ಕಾಚಾರಗಳು ಸಂಪೂರ್ಣ ತಲೆಕೆಳಗಾಗಿವೆ.
8
+ ಕಾಂಗ್ರೆಸ್‌‍ ಪಕ್ಷ ಸಂಪೂರ್ಣವಾಗಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದು, ಶಾಸಕರೂ ಕೂಡ ಸಿದ್ದರಾಮಯ್ಯ ರಾಜ್ಯದ ಮಟ್ಟಿಗೆ ಸರ್ವೋಚ್ಛ ನಾಯಕ ಎಂಬುದನ್ನು ಒಪ್ಪಿಕೊಂಡಂತಾಗಿ���ೆ. ಹೀಗಾಗಿ ಬಿಜೆಪಿ-ಜೆಡಿಎಸ್‌‍ನ ಪಾದಯಾತ್ರೆ ಖಾಲಿಕೊಡದಂತಾಗಿದೆ.ಇನ್ನೇನಿದ್ದರೂ ಕಾನೂನಾತಕ ಹೋರಾಟಗಳಷ್ಟೇ ಮುಡಾ ಪ್ರಕರಣದಲ್ಲಿ ಪರಿಣಾಮ ಉಂಟುಮಾಡಬಲ್ಲದೇ ಹೊರತು ಪಾದಯಾತ್ರೆ ಅಥವಾ ರಾಜಕೀಯ ಹೋರಾಟಗಳು ವ್ಯರ್ಥ ಪ್ರಯತ್ನಗಳು ಎಂಬುದು ಸ್ಪಷ್ಟವಾಗಿದೆ.
9
+ ಗಾಜಿನ ಮನೆಯಲ್ಲಿರುವವರು ಹೊರಗಡೆ ಇರುವವರಿಗೆ ಕಲ್ಲು ಹೊಡೆಯಬಾರದು ಎಂಬುದು ರಾಜಕೀಯದಲ್ಲಿ ಅಘೋಷಿತವಾದ ಸತ್ಯ. ಅದಕ್ಕೆ ತಕ್ಕ ಹಾಗೆ ಪಾದಯಾತ್ರೆಯ ನೀರಸ ಪರಿಣಾಮ ವಿಪಕ್ಷಗಳನ್ನು ಬೆಸ್ತು ಬೀಳುವಂತೆ ಮಾಡಿದೆ.ಕಾಂಗ್ರೆಸ್‌‍ ಹೈಕಮಾಂಡ್‌ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿರುವುದರಿಂದಾಗಿ ಮುಖ್ಯಮಂತ್ರಿ ಕುರ್ಚಿಯನ್ನು ಅಲುಗಾಡಿಸುವ ಪ್ರಯತ್ನ ವ್ಯರ್ಥವಾಗಿದೆ.
eesanje/url_46_48_2.txt ADDED
@@ -0,0 +1,5 @@
 
 
 
 
 
 
1
+ “ದರಿದ್ರ ಕಾಂಗ್ರೆಸ್‌‍ ಸರ್ಕಾರ ಇರುವವರೆಗೂ ರೈತರಿಗೆ ನೆಮ್ಮದಿಯಿಲ್ಲ” : ಆರ್‌.ಅಶೋಕ್‌
2
+ ಬೆಂಗಳೂರು,ಆ.12-ದರಿದ್ರ ಕಾಂಗ್ರೆಸ್‌‍ ನೇತೃತ್ವದ ಸರ್ಕಾರ ಇರುವವರೆಗೂ ನಾಡಿನ ರೈತರಿಗೆ ನೆಮ್ಮದಿ ಇಲ್ಲ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಟೀಕಾಪ್ರಹಾರ ನಡೆಸಿದ್ದಾರೆ.
3
+ ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್‌ ಮಾಡಿರುವ ಅವರು, ಈ ವರ್ಷ ದೇವರ ದಯೆಯಿಂದ ಒಳ್ಳೆಯ ಮಳೆ ಬಂದರೂ ಡ್ಯಾಂನಲ್ಲಿ ನೀರು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
4
+ ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್‌‍ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ. ಕಳೆದ ವರ್ಷ ಬರಗಾಲದಲ್ಲಿ ಸಕಾಲಕ್ಕೆ ಪರಿಹಾರ ಕೊಡಲಿಲ್ಲ ಎಂದು ಅಶೋಕ್‌ ಆರೋಪಿಸಿದ್ದಾರೆ.
5
+ ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ.❌ಕಳೆದ ವರ್ಷ ಬರಗಾಲದಲ್ಲಿ ಸಕಾಲಕ್ಕೆ ಪರಿಹಾರ ಕೊಡಲಿಲ್ಲ.❌ಈ ವರ್ಷ ದೇವರ ದಯೆಯಿಂದ ಒಳ್ಳೆ ಮಳೆ ಬಂದರೂ ಡ್ಯಾಂನಲ್ಲಿ ನೀರು ಉಳಿಸಿಕೊಳ್ಳಲು ಆಗಲಿಲ್ಲ.ಒಟ್ಟಿನಲ್ಲಿ ಈ ದರಿದ್ರ@INCKarnatakaಸರ್ಕಾರ ಇರುವವರೆಗೂ ನಾಡಿನ ರೈತರಿಗೆ ನೆಮ್ಮದಿ ಇಲ್ಲ.../2phKXo5c9Y
eesanje/url_46_48_3.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಬಿಜೆಪಿಯಲ್ಲಿ ಬಣ ರಾಜಕೀಯ, ರೋಸಿಹೋದ ಕಾರ್ಯಕರ್ತರು, ವರಿಷ್ಠರ ದ್ವಂದ್ವ ನೀತಿಗೆ ಅಸಮಾಧಾನ
2
+ ಬೆಂಗಳೂರು,ಆ.12-ಒಂದು ಕಡೆ ತೊಟ್ಟಿಲನ್ನು ತೂಗುವ ಮತ್ತೊಂದೆಡೆ ಮಗುವನ್ನು ಚಿವುಟುವ ಬಿಜೆಪಿ ಕೇಂದ್ರ ವರಿಷ್ಠರ ದ್ವಂದ್ವ ನಿಲುವು ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸುತ್ತಿದ್ದು, ತಕ್ಷಣವೇ ಮಧ್ಯಪ್ರವೇಶ ಮಾಡಬೇಕೆಂಬ ಆಗ್ರಹ ಕೇಳಿಬರುತ್ತಿದೆ.
3
+ ಏಕೆಂದರೆ ಮುಡಾ ಹಾಗೂ ವಾಲೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು ಚಲೊ ಪಾದಯಾತ್ರೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
4
+ ಇದರ ಬೆನ್ನಲ್ಲೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ನೇತೃತ್ವದಲ್ಲಿ ಭಾನುವಾರ ಬೆಳಗಾವಿಯ ಹೊರವಲಯದಲ್ಲಿರುವ ರೆಸಾರ್ಟ್‌ವೊಂದರಲ್ಲಿ ಕೆಲವು ಪ್ರಮುಖರು ಸಭೆ ನಡೆಸಿ ಪರ್ಯಾಯ ಯಾತ್ರೆಗೆ ಸಜ್ಜಾಗುತ್ತಿದ್ದಾರೆ.
5
+ ಇದು ಪಕ್ಷದ ಕಾರ್ಯಕರ್ತರಲ್ಲೇ ಗೊಂದಲ ಮೂಡಿಸುತ್ತಿದ್ದು, ಭಿನ್ನಮತೀಯ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಪಕ್ಷ ಇನ್ನಷ್ಟು ಅದೋಗತಿಗೆ ಇಳಿಯುತ್ತದೆ ಎಂಬ ಆತಂಕವನ್ನು ಹೊರಹಾಕಿದ್ದಾರೆ.
6
+ ರಾಜ್ಯಾಧ್ಯಕ್ಷರೇ ಇಲ್ಲದ ಮೇಲೆ ಪರ್ಯಾಯ ಯಾತ್ರೆಯನ್ನು ಯಾವ ಆಧಾರದ ಮೇಲೆ ನಡೆಸುತ್ತಾರೆ?, ಇದಕ್ಕೆ ಪಕ್ಷದ ವರಿಷ್ಠರು ಅನುಮತಿಯನ್ನು ನೀಡಲಿದ್ದಾರೆಯೇ?, ಪಕ್ಷದ ಚಿಹ್ನೆಯಡಿ ಪಾದಯಾತ್ರೆ ನಡೆಸುವುದಾದರೆ ಬಿ.ವೈ.ವಿಜಯೇಂದ್ರ ಇರಬೇಕಲ್ಲವೇ?, ಇಷ್ಟಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೆ ವರಿಷ್ಠರು ಮಾತ್ರ ಮೌನಕ್ಕೆ ಶರಣಾಗಿರುವ ಉದ್ದೇಶವಾದರೂ ಏನು ಎಂಬ ಮೂಲಭೂತ ಪ್ರಶ್ನೆಯನ್ನು ಎತ್ತಿದ್ದಾರೆ.
7
+ ನಾವು ಇತರ ಪಕ್ಷಗಳಿಗಿಂತಲೂ ಭಿನ್ನ ಎಂದು ಹೇಳುವ ಬಿಜೆಪಿಯಲ್ಲಿ ಸದ್ಯ ಮನೆಯೊಂದು ಮೂರು ಬಾಗಿಲು ಎನ್ನುವುದಕ್ಕಿಂತಲೂ ಒಂಭತ್ತು ಬಾಗಿಲು ಆಗಿದೆ ಎನ್ನುವುದೇ ಸೂಕ್ತ ಎಂಬುದು ನಿಷ್ಠಾವಂತ ಕಾರ್ಯಕರ್ತರ ಅಳಲು.
8
+ ಬೇರೆ ರಾಜ್ಯಗಳಲ್ಲಿ ಸಣ್ಣ ಭಿನ್ನಮತ ಕಿಡಿ ಹತ್ತಿದಾಗ ತಕ್ಷಣವೇ ಮಧ್ಯಪ್ರವೇಶಿಸಿ ಮುಲಾಮು ಹಚ್ಚುವ ವರಿಷ್ಠರಿಗೆ ಕರ್ನಾಟಕದಲ್ಲಿ ಬಣಗಳ ಬಡಿದಾಟ ಜೋರಾಗಿದ್ದರೂ ಏಕೆ ಕೈಕಟ್ಟಿ ಕುಳಿತಿದ್ದಾರೆ. ಅಷ್ಟೊಂದು ಅಸಹಾಯಕರಾಗಿದ್ದಾರೆಯೇ? ಇಲ್ಲವೇ ಎಲ್ಲವೂ ಮೇಲಿನವರ ಅಣತಿಯಂತೆಯೇ ನಡೆಯುತ್ತದೆಯೇ? ಎಂಬ ಗುಮಾನಿ ಕೇಳಿಬಂದಿದೆ.
9
+ ಇಷ್ಟ ಇರಲಿ, ಬಿಡಲಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಮೇಲೆ ಒಪ್ಪಿಕೊಳ್ಳಲೇಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಬೇಕಲ್ಲವೇ? ಸ್ವಪಕ್ಷೀಯರ ವಿರುದ್ಧವೇ ಬಹಿರಂಗ ಹೇಳಿಕೆ ನೀಡುವವರಿಗೆ ಕನಿಷ್ಠ ಪಕ್ಷ ಒಂದು ಸಣ್ಣ ನೋಟೀಸ್‌‍ ನೀಡಲಿಲ್ಲ ಎಂದರೆ ಪಕ್ಷದಲ್ಲಿ ಶಿಸ್ತು ಕಾಪಾಡಲು ಸಾಧ್ಯವೇ ಎಂದು ಕಾರ್ಯಕರ್ತರೇ ನೊಂದು ಹೇಳುತ್ತಿದ್ದಾರೆ.ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಜಿ.ಎಂ.ಸಿದ್ದೇಶ್‌, ಪ್ರತಾಪ್‌ ಸಿಂಹ, ಬಿ.ಪಿ.ಹರೀಶ್‌, ಕುಮಾರ್‌ ಬಂಗಾರಪ್ಪ ಇಂತಹ ಬೆರಳೆಣಿಕೆಯ ನಾಯಕರು ಸಭೆ ನಡೆಸಲು ಮುಂದಾದ ವೇಳೆ ಅದಕ್ಕೆ ಕಡಿವಾಣ ಹಾಕಬೇಕಿತ್ತು.
10
+ ವರಿಷ್ಠರಿಗೆ ಎಲ್ಲಾ ಮಾಹಿತಿ ಇದ್ದರೂ ಹಿಂದೇಟು ಹಾಕುತ್ತಿರುವುದಕ್ಕೆ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ.ಈ ಹಿಂದೆ ಕಾರ್ಯಕಾರಿಣಿ ಸಭೆ ನಡೆದಾಗ ಒಗ್ಗಟ್ಟಿನ ಮಂತ್ರ ಪಠಿಸಲಾಗಿತ್ತು. ಇನ್ನು ಮುಂದೆ ಪಕ್ಷದಲ್ಲಿ ಅಸಮಾಧಾನ ಸರಿಹೋಗಿ ಎಲ್ಲವೂ ಸುಸೂತ್ರವಾಗಿ ಮುನ್ನಡೆಯಲಿದೆ ಎಂಬ ಆಶಾಭಾವನೆ ಕೇಳಿಬಂದಾಗಲೇ ಮತ್ತೆ ಬಣ ಬಡಿದಾಟ ಮುನ್ನೆಲೆಗೆ ಬಂದಿರುವುದು ಬಿಜೆಪಿಯನ್ನು ಸಾಕ್ಷಾತ್‌ ಸೃಷ್ಟಿಕರ್ತ ಕೂಡ ಸರಿ ಮಾಡಲಾರ ಎಂಬ ಅಪವಾದ ಕೇಳಿಬರುತ್ತಿದೆ.
11
+ ಬಿಜೆಪಿ ವಿರೋಧಪಕ್ಷವಾಗಿ ಮತ್ತು ಸಂಘಟನಾತಕವಾಗಿಯೂ ವಿಫಲವಾಗಿದೆ ಎಂಬ ಆಪಾದನೆಗಳು ಕೇಳಿಬಂದಾಗ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಮೈಸೂರು ಚಲೊ ಯಾತ್ರೆ ಪಕ್ಷಕ್ಕೆ ಒಂದಿಷ್ಟು ಶಕ್ತಿ ತುಂಬಿತ್ತು. ಆದರೆ ಏಕಾಏಕಿ ಯತ್ನಾಳ್‌ ಮತ್ತು ಅವರ ತಂಡ ಭಿನ್ನಮತೀಯ ಚಟುವಟಿಕೆಗಳಿಗೆ ಮುನ್ನುಡಿ ಬರೆದಿರುವುದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾರಿ ಹೇಳಿದೆ.
12
+ ಸ್ವಪಕ್ಷೀಯರಿಂದಲೇ ಟೀಕೆ :ವಿರೋಧ ಪಕ್ಷವಾಗಿ ಬಿಜೆಪಿ ರಾಜ್ಯದಲ್ಲಿ ವಿವಾಗಿದೆ ಎಂಬ ಆರೋಪ ಇತ್ತು. ಇದನ್ನು ಸ್ವತಃ ಬಿಜೆಪಿ ಶಾಸಕರೇ ಮಾಡಿದ್ದರು. ಅದರಲ್ಲೂ ಬಸನಗೌಡ ಪಾಟೀಲ್‌ ಯತ್ನಾಳ್‌, ಮಾಜಿ ಸಂಸದ ಡಿ.ವಿ.ಸದಾನಂದ ಗೌಡ ಇಂತಹ ಗಂಭೀರ ಆರೋಪವನ್ನು ಮಾಡಿದ್ದರು. ಅಲ್ಲದೆ ಪಕ್ಷ ಸುಧಾರಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಸಲಹೆಗಳನ್ನು ನೀಡಿದ್ದರು. ಈ ನಡುವೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ಬಗ್ಗೆಯೂ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವಲ್ಲಿ ಪಕ್ಷ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನ ವಿಲವಾಗಿದೆ ಎಂಬ ಆರೋಪ ಇದೆ.
eesanje/url_46_48_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಭಾರೀ ಕುತೂಹಲ ಕೆರಳಿಸಿದೆ ಸಿ.ಪಿ.ಯೋಗೇಶ್ವರ್‌ ದೆಹಲಿ ಭೇಟಿ
2
+ ಬೆಂಗಳೂರು,ಆ.11-ಯಾವುದೇ ಕ್ಷಣದಲ್ಲಿ ನಡೆಯಬಹುದಾದ ರಾಮನಗರ ಜಿಲ್ಲೆ ಚನ್ನಪಟ್ಟಣ ಉಪಚುನಾವಣೆ ಸಂಬಂಧ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ದೆಹಲಿಗೆ ದೌಡಾಯಿಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟರು.ಮೂಲಗಳ ಪ್ರಕಾರ ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಿ.ಪಿ.ಯೋಗೇಶ್ವರ್‌ ಜೊತೆ ಮಾತುಕತೆ ನಡೆಸುವ ಸಂಭವವಿದೆ.
3
+ ಹೀಗಾಗಿಯೇ ಅವರನ್ನು ಪಕ್ಷದ ವರಿಷ್ಠರು ದೆಹಲಿಗೆ ಬರುವಂತೆ ಬುಲಾವ್‌ ನೀಡಿದ್ದು, ಯೋಗೇಶ್ವರ್‌ ಅವರ ಮುಂದಿನ ರಾಜಕೀಯ ನಡೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.ದೆಹಲಿಯಲ್ಲಿ ನಡೆಯಲಿರುವ ಮಾತುಕತೆ ಸಂದರ್ಭದಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕೇ ಇಲ್ಲವೇ? ಜೆಡಿಎಸ್‌‍ಗೆ ಕ್ಷೇತ್ರವನ್ನು ಬಿಟ್ಟುಕೊಡಬೇಕೇ? ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ಗೊತ್ತಾಗಲಿದೆ.
4
+ ಯಾವುದೇ ರೀತಿಯ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ಅಭಿಮಾನಿಗಳ ಪಾಲಿನ ಸೈನಿಕನಿಗೆ ವರಿಷ್ಠರು ಕಿವಿಮಾತು ಹೇಳಲಿದ್ದಾರೆ. ಏಕೆಂದರೆ ಟಿಕೆಟ್‌ ಸಿಗದಿದ್ದರೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಚಿಂತನೆ ನಡೆಸಿದ್ದರು.
5
+ ಇದಕ್ಕೆ ಪುಷ್ಟಿ ನೀಡುವಂತೆ ಯೋಗೇಶ್ವರ್‌ ಅಭಿಮಾನಿ ಬಳಗ ಮತ್ತು ಸಮಾನ ಮನಸ್ಕರ ವೇದಿಕೆ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಮ ಶಾಸಕ ನಮ ಹಕ್ಕು ಹೆಸರಿನಲ್ಲಿ ಸಮಾವೇಶ ನಡೆಸಿದೆ. ಉಪಚುನಾವಣೆಯಲ್ಲಿ ಟಿಕೆಟ್‌ ಸಿಗದಿದ್ದರೇ ಸ್ವತಂತ್ರ ಸ್ಪರ್ಧೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಾವೇಶ ನಡೆಸಲು ಮುಂದಾಗಿದ್ದ ಯೋಗೇಶ್ವರ್‌ಗೆ ಬಿಜೆಪಿ ಹೈಕಮಾಂಡ್‌ ದೆಹಲಿಗೆ ಬರುವಂತೆ ಸೂಚನೆ ನೀಡಿದೆ.
6
+ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಪಕ್ಷದಿಂದ ಕಣಕ್ಕಿಳಿಯಲು ಬಯಸಿದ್ದ ಯೋಗೇಶ್ವರ್‌ಗೆ ಮೈತ್ರಿ ನಾಯಕರಿಂದ ಸೂಕ್ತ ಸ್ಪಂದನೆ ಸಿಕ್ಕಿರಲಿಲ್ಲ. ಪಕ್ಷೇತರರಾಗಿ ಕಣಕ್ಕಿಳಿಯುವ ಉದ್ದೇಶದಿಂದ ಬೃಹತ್‌ ಸಮಾವೇಶ ನಡೆಸಿ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದರು.
7
+ ಸ್ವತಂತ್ರ ಸ್ಪರ್ಧೆಗೆ ಚಿಂತನೆ:ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆಯಿಂದ ದೂರ ಉಳಿದು ಬಂಡಾಯದ ಬಾವುಟ ಹಾರಿಸಿದ್ದ ಯೋಗೇಶ್ವರ್‌, ಸದ್ಯದಲ್ಲೇ ಎದುರುಗಾವು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು.ಚನ್ನಪಟ್ಟಣ ಟಿಕೆಟ್‌ ತಮಗೇ ಸಿಗುತ್ತದೆ ಎಂಬ ಅದಮ್ಯ ವಿಶ್ವಾಸದಲ್ಲದ್ದ ಸಿ.ಪಿ.ಯೋಗೇಶ್ವರ್‌ ತಾವೇ ಮೈತ್ರಿ ಅಭ್ಯರ್ಥಿ ಎಂದು ಘೋಷಣೆ ಕೂಡ ಮಾಡಿಕೊಂಡಿದ್ದರು. ಆದರೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ಆಸೆಗೆ ತಣ್ಣೀರು ಎರಚಿದ್ದರು.
8
+ ಮಗ ನಿಖಿಲ್‌ ಕುಮಾರಸ್ವಾಮಿಗೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಟಿಕೆಟ್‌ ನೀಡಲು ಅವರು ಲಾಬಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಗೇಶ್ವರ್‌ ಅವರು ವಿರೋಧಿಗಳಿಗೆ ಸ್ಪಷ್ಟ ಸಂದೇಶ ಸಾರಲು ತಮ ರಾಜಕೀಯ ನಿರ್ಧಾರ ಘೋಷಿಸಲು ಮುಂದಾಗಿದ್ದರು.
9
+ ಇದಕ್ಕಾಗಿ ಸಿ.ಪಿ.ಯೋಗೇಶ್ವರ್‌ ಬೆಂಬಲಿಗರು ಚನ್ನಪಟ್ಟಣದಲ್ಲಿ ಬೃಹತ್‌ ಸಮಾವೇಶವನ್ನು ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮದ ಮೂಲಕ ವಿರೋಧಿಗಳಿಗೆ ಪಾಠ ಕಲಿಸುವುದು ಸಿಪಿ ಯೇಗೇಶ್ವರ್‌ ಮಹದಾಸೆಯಾಗಿತ್ತು.ಆದರೆ ಪಕ್ಷದ ಕೇಂದ್ರ ನಾಯಕರು ಕರೆ ನೀಡಿದ್ದ ಬೆನ್ನಲ್ಲೇ ಸಮಾವೇಶ ರದ್ದಾಗಿದೆ. ಇದರಿಂದಾಗಿ ತಮ ರಾಜಕೀಯ ನಿರ್ಧಾರ ತೆಗೆದುಕೊಳ್ಳಲು ತರಾತುರಿಯಲ್ಲಿದ್ದ ಸಿಪಿ ಯೇಗೇಶ್ವರ್‌ ಅವರಿಗೆ ನಿರಾಸೆಯಾಗಿದೆ.
10
+ ನಾಳೆ ದೆಹಲಿಯಲ್ಲಿ ಸಭೆ ನಡೆಯಲಿದ್ದು, ಬಹುಮತ ಟಿಕೆಟ್‌ ಯಾರಿಗೆ ಎನ್ನುವುದು ನಿರ್ಧಾರವಾಗಲಿದೆ. ಸಭೆ ಬಳಿಕ ಸಿ.ಪಿ.ಯೋಗೇಶ್ವರ್‌ ಅವರ ಮುಂದಿನ ನಿರ್ಧಾರ ಗೊತ್ತಾಗಲಿದೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಭಾರೀ ಕುತೂಹಲ ಉಂಟು ಮಾಡಿದೆ.
eesanje/url_46_48_5.txt ADDED
@@ -0,0 +1,5 @@
 
 
 
 
 
 
1
+ ಹುತ್ತಕ್ಕೆ ಹಾಲೇರಿಯುವುದು ವೌಢ್ಯ
2
+ ಬೆಂಗಳೂರು, ಆ, 11– ಹುತ್ತಕ್ಕೆ ಹಾಲೆರೆಯುವುದು ಸೂಕ್ತವಲ್ಲ. ಇಂತಹ ಕಾರ್ಯಗಳಿಂದ ಹಾವು ಸೇರಿದಂತೆ ಇತರೆ ಜೀವಿಗಳಿಗೆ ಹಾನಿಯಾಗುತ್ತದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕಾರ್ಯದರ್ಶಿ ಇ ಬಸವರಾಜು ತಿಳಿಸಿದ್ದಾರೆ.
3
+ ವಿಧ್ಯಾರ್ಥಿ ಬಂಧುತ್ವ ವೇದಿಕೆ ಯಿಂದ ಗಾಂಧಿನಗರದ ವಿನೋಬಾ ಬಾವೆ ಅನಾಥ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ನಾಗರ ಪಂಚಮಿಯಿಂದ ಉಂಟಾ ಗುವ ಪರಿಸರ ಹಾನಿ ಮತ್ತು ಹಾಲನ್ನು ವ್ಯರ್ಥ ಮಾಡುತ್ತಿರುವ ಕುರಿತು ವಿದ್ಯಾರ್ಥಿಗಳಲ್ಲಿ ಇದೇ ಸಂದರ್ಭದಲ್ಲಿ ಅವರು ಅರಿವು ಮೂಡಿಸಿದರು.
4
+ ಹುತ್ತಕ್ಕೆ ಹಾಲೆರೆಯುವ ಬದಲು ವಿದ್ಯಾರ್ಥಿಗಳಿಗೆ ಹಾಲು ವಿತರಿಸುವ ಮೂಲಕ ಮೌಢ್ಯ ತೊರೆದು ಬಸವ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಪತ್ರಕರ್ತ ಆಲ್ಬೂರು ಶಿವರಾಜ ಮಾತನಾಡಿ, ಹಬ್ಬ ಹರಿದಿನಗಳ ಆಚರಣೆಗೆ ವಿರೋಧವಿಲ್ಲ.
5
+ ಆದರೆ ನಾಗರ ಪಂಚಮಿಯಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಳ್ಳ ಬೇಕು ಎಂದರು.ಎಂ.ಬಿ.ವಿ ಜಿಲ್ಲಾ ಸಮಿತಿಯ ಡಿ ವೀರಣ್ಣ, ಸಂಚಾಲಕರಾದ ತೋರಣ್ ಕುಮಾರ್ ಹಾಗೂ ಆಶ್ರಮದ ಮುಖ್ಯಸ್ಥರು ಉಪಸ್ಥಿತರಿದ್ದರು.
eesanje/url_46_48_6.txt ADDED
@@ -0,0 +1,8 @@
 
 
 
 
 
 
 
 
 
1
+ ಸರ್ಕಾರದ ಬೇಜವಾಬ್ದಾರಿಯಿಂದ ತುಂಗಾಭದ್ರಾ ಅಣೆಕಟ್ಟು ಅಪಾಯಕ್ಕೆ ಸಿಲುಕಿದೆ : ವಿಪಕ್ಷಗಳ ಟೀಕೆ
2
+ ಬೆಂಗಳೂರು,ಆ.11-ತುಂಗಾಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್‌ನ ಸರಪಳಿ ತುಂಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ-ಪ್ರತ್ಯಾರೋಪಗಳು ಮೇರೆ ಮೀರಿದ್ದು, ಸರ್ಕಾರ ಸದ್ಯಕ್ಕೆ ಡ್ಯಾಂನ ಸುರಕ್ಷತೆಗೆ ಆದ್ಯತೆ ನೀಡುವುದಾಗಿ ಹೇಳುತ್ತಿದೆ. ವಿರೋಧಪಕ್ಷಗಳು ಸರ್ಕಾರದ ಬೇಜವಾಬ್ದಾರಿಯಿಂದ ಅಣೆಕಟ್ಟು ಅಪಾಯಕ್ಕೆ ಸಿಲುಕಿದೆ ಎಂದು ಟೀಕಿಸುತ್ತಿವೆ.
3
+ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಮಾತನಾಡಿ, ತಜ್ಞರ ಸಲಹೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯ ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಡ್ಯಾಂನ ನೀರನ್ನು ಖಾಲಿ ಮಾಡಲು ಹೊರಹರಿವು ಹೆಚ್ಚಿಸುವುದರಿಂದ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರಿನ ಹರಿಯುವ ಭಾಗದಲ್ಲಿನ ಗ್ರಾಮಗಳ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದರು.
4
+ ಸದ್ಯಕ್ಕೆ ಅನಗತ್ಯವಾದ ಆತಂಕ ಬೇಡ. ಅಣೆಕಟ್ಟು ಸುರಕ್ಷಿತ ಎಂಬ ಅಭಿಪ್ರಾಯವಿದೆ. ತಾಂತ್ರಿಕ ತಂಡ ಸ್ಥಳ ಪರಿಶೀಲನೆ ಬಳಿಕ ವಾಸ್ತವಾಂಶ ತಿಳಿದುಬರಲಿದೆ ಎಂದರು.ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ಮಾತನಾಡಿ, ಅಣೆಕಟ್ಟೆ ಮೂಲನಕ್ಷೆ ಇಂದು ಬೆಳಿಗ್ಗೆ ನಮಗೆ ತಲುಪಿದೆ. ಅಧಿಕಾರಿಗಳು ಹಾಗೂ ತಜ್ಞರ ತಂಡ ಸಭೆಗಳನ್ನು ನಡೆಸಿ ಸಮಾಲೋಚನೆ ಕೈಗೊಳ್ಳುತ್ತಿದೆ. 2-3 ದಿನದ ಒಳಗೆ ನೀರು ತಗ್ಗಿದ ನಂತರ ಕ್ರಸ್ಟ್‌ಗೇಟ್‌ ಅಳವಡಿಸುವ ದುರಸ್ಥಿ ಕಾರ್ಯ ಅಳವಡಿಸಲಾಗುವುದು. ರೈತರ ಹಿತ ಕಾಪಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
5
+ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮಾಯಿ, ಕ್ರಸ್ಟ್‌ಗೇಟ್‌ ತುಂಡಾಗಲು ರಾಜ್ಯಸರ್ಕಾರದ ಬೇಜವಾಬ್ದಾರಿಯೂ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.ಡ್ಯಾಂನ ನಿಗಾವಣೆಗೆ ಇಂಜಿನಿಯರ್‌ಗಳೂ ಸೇರಿದಂತೆ ಅಧಿಕಾರಿಗಳ ತಂಡ ಇರುತ್ತದೆ. ಕಾಲಕಾಲಕ್ಕೆ ಅವರು ಪರಿಶೀಲನೆ ನಡೆಸಬೇಕು. ಜೊತೆಗೆ ಅಣೆಕಟ್ಟು ಉಸ್ತುವಾರಿ ಸಮಿತಿಯಲ್ಲಿ ಕೇಂದ್ರಸರ್ಕಾರದ ಅಧಿಕಾರಿಗಳಿರುತ್ತಾರೆ. ಅವರು ಪದೇಪದೇ ಸುರಕ್ಷತಾ ವಿಚಾರವಾಗಿ ಸಲಹೆಗಳನ್ನು ನೀಡಿರುತ್ತಾರೆ. ರಾಜ್ಯಸರ್ಕಾರ ಅದನ್ನು ಅತ್ಯಾದ್ಯತೆಯ ಮೇರೆಗೆ ಪಾಲನೆ ಮಾಡಬೇಕಿತ್ತು ಎಂದ್ದಿದ್ದಾರೆ.
6
+ ತುಂಗಭದ್ರ ಅಣೆಕಟ್ಟಿಗೆ ಪರ್ಯಾಯವಾಗಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ತಾವು ಅಧಿಕಾರದಲ್ಲಿದ್ದಾಗ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಗೊಳಿಸಲು ಸೂಚಿಸಲಾಗಿದ್ದು, ಆ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
7
+ ಮಾಜಿ ಸಚಿವ ಹಾಲಪ್ಪ ಆಚಾರ್‌ ಮಾತನಾಡಿ, ತುಂಗಭದ್ರ ಡ್ಯಾಂನಲ್ಲಿ ದೊಡ್ಡ ಅನ್ಯಾಯವಾಗಿದೆ. ಸರ್ಕಾರ ಮುನ್ನೆಚ್ಚರಿಕೆ ವಹಿಸಿದ್ದರೆ ಸಂಭವನೀಯ ಅನ್ಯಾಯವನ್ನು ತಪ್ಪಿಸಬಹುದಿತ್ತು. ರೈತರ ನೋವು-ನಲಿವುಗಳು ಅರ್ಥವಾಗದೇ ಇದ್ದವರು ಮಾತ್ರ ಈ ರೀತಿಯ ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
8
+ ಡ್ಯಾಂನ ಸುರಕ್ಷತಾ ಸಮಿತಿ ಅಧಿಕಾರಿ ಓಆರ್‌ಕೆ ರೆಡ್ಡಿ ಮಾತನಾಡಿ, 28 ಗೇಟ್‌ಗಳನ್ನು ತೆರದು ನೀರನ್ನು ಹೊರಗೆ ಹರಿಸಲಾಗುತ್ತಿದೆ. ಮುಖ್ಯಮಂತ್ರಿಯವರಿಗೆ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ವರದಿ ನೀಡಲಾಗಿದೆ. ಡ್ಯಾಂನ ಸುರಕ್ಷತೆಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ. ವೆಲ್ಡಿಂಗ್‌ ಕಟ್‌ ಆಗಿದ್ದರಿಂದಾಗಿ 19ನೇ ಕ್ರಸ್ಟ್‌ಗೇಟ್‌ ತುಂಡಾಗಿದೆ. ಅದನ್ನು ಶೀಘ್ರವಾಗಿಯೇ ದುರಸ್ಥಿ ಮಾಡಲಾಗುವುದು ಎಂದು ಹೇಳಿದ್ದಾರೆ.
eesanje/url_46_48_7.txt ADDED
@@ -0,0 +1,7 @@
 
 
 
 
 
 
 
 
1
+ ತುಂಗಭದ್ರಾ ಅಣೆಕಟ್ಟಿನ ಗೇಟಿನ ದುರಸ್ತಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ : ಡಿಸಿಎಂ ಡಿಕೆಶಿ
2
+ ಬೆಂಗಳೂರು,ಆ.11– ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.
3
+ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಥಳಕ್ಕೆ ತೆರಳುವ ಮುನ್ನ ಇಂದು ಬೆಳಿಗ್ಗೆ ಬೆಂಗಳೂರಿನ ತಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯಕ್ಕೆ ನಮಗೆ ಡ್ಯಾಂನ ಸುರಕ್ಷತೆ ಮುಖ್ಯ. ನೀರನ್ನು ಉಳಿಸಿಕೊಂಡೇ ದುರಸ್ಥಿಗೆ ಪ್ರಯತ್ನ ನಡೆಸುತ್ತೇವೆ. ನಮ ಹಾಗೂ ರೈತರ ಅಭಿಪ್ರಾಯಗಳು ಏನೇ ಇದ್ದರೂ ತಜ್ಞರ ಅಭಿಪ್ರಾಯಗಳು ಮುಖ್ಯವಾಗುತ್ತವೆ. ಅದನ್ನು ಪಡೆದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಡ್ಯಾಂನಲ್ಲಿ ಕ್ರಸ್ಟ್‌ಗೇಟ್‌ಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಅಳವಡಿಸಬೇಕಿದೆ ಎಂದರು.
4
+ ನೀರನ್ನು ಹೊರಗೆ ಬಿಡದ ಹೊರತು ಗೇಟ್‌ ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದ ಕಾರಣ ತಂತ್ರಜ್ಞರ ವರದಿಯ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
5
+ ಅಣೆಕಟ್ಟಿನ 1 ರಿಂದ 16 ನೇ ಗೇಟುಗಳನ್ನು ಸಿಡಬ್ಲ್ಯೂಸಿ ನಿರ್ವಹಣೆ ಮಾಡುತ್ತದೆ. 17 ರಿಂದ 32 ರವರೆಗಿನ ಜವಾಬ್ದಾರಿ ಕರ್ನಾಟಕ ಸರ್ಕಾರದ್ದಾಗಿದೆ. ಕೇಂದ್ರ ಜಲ ಆಯೋಗದವರು ಸಹ ಒಂದಷ್ಟು ತಂತ್ರಜ್ಞರನ್ನು ಕಳುಹಿಸಿದ್ದಾರೆ. ನಾವು ಸಹ ನುರಿತ ತಂತ್ರಜ್ಞರನ್ನು ಕಳುಹಿಸಿದ್ದೇವೆ. ನಾನು ಸಹ ಶನಿವಾರ ರಾತ್ರಿಯಿಂದಲೇ ಅಧಿಕಾರಿಗಳ ಜೊತೆ ದೂರವಾಣಿ ಸಂಪರ್ಕದಲ್ಲಿದ್ದು ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ ಎಂದು ಹೇಳಿದರು.
6
+ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್‌ ಮುರಿದ ಕಾರಣ ಈ ತೊಂದರೆ ಉಂಟಾಗಿದೆ. ಭಾರಿ ಪ್ರಮಾಣದಲ್ಲಿ ನೀರು ಹೊರ ಹೋಗುತ್ತಿದ್ದು, ಅಣೆಕಟ್ಟಿನ ಭದ್ರತೆಯ ದೃಷ್ಟಿಯಿಂದ ಎಲ್ಲಾ ಗೇಟ್‌ ಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತಿದೆ. ಅಣೆಕಟ್ಟಿನ ಕೆಳಭಾಗದ ಹಾಗೂ ನದಿ ಪಾತ್ರದ ಎಲ್ಲಾ ಜನರಿಗೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
7
+ ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗುತ್ತದೆಯೇ ಎಂದು ಪ್ರಶ್ನಿಸಿದಾಗ ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು. ಇದರಲ್ಲಿ ನಾನು ಯಾರ ಮಾತನ್ನು ಕೇಳುವುದಿಲ್ಲ. ಸ್ಥಳೀಯರು ಹಾಗೂ ರೈತರು ಒಂದಷ್ಟು ಅಭಿಪ್ರಾಯಗಳನ್ನು ಸೂಚಿಸುತ್ತಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಗೌರವಿಸಲಾಗುವುದು. ಆದರೆ ಅಂತಿಮವಾಗಿ ತಂತ್ರಜ್ಞರ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು. ನಮಗೆ ನಮ ರೈತರ ಹಿತ ಮುಖ್ಯ ಎಂದು ಹೇಳಿದರು.
eesanje/url_46_48_8.txt ADDED
@@ -0,0 +1,4 @@
 
 
 
 
 
1
+ ತುಂಗಭದ್ರಾ ಜಲಾಶಯಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು,ಆ.11-ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್‌ ಘಟನೆ ಕುರಿತಂತೆ ಜಲ ಸಂಪನೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
3
+ ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿಯವರು ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ.
4
+ ಜಲ ಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.
eesanje/url_46_48_9.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ತುಂಗಭದ್ರಾ ಡ್ಯಾಮ್ ಸುರಕ್ಷತೆಗೆ ದೌಡಾಯಿಸಿದ ತಜ್ಞರು, ರೈತರಲ್ಲಿ ಹೆಚ್ಚಿದ ಆತಂಕ
2
+ ಕೊಪ್ಪಳ,ಆ.11-ತಾಲ್ಲೂಕಿನ ಮುನಿರಾಬಾದ್‌ ಬಳಿಯಿರುವ ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್‌ಗೇಟ್‌ ಸರಪಳಿ ಕೊಂಡಿ ತುಂಡಾಗಿದ್ದರಿಂದ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು, ಜಲಾಶಯದ ಸುರಕ್ಷತೆಯ ಪ್ರಶ್ನೆ ಎದುರಾಗಿದೆ.
3
+ ನಿನ್ನೆ ರಾತ್ರಿ 9.30 ರಿಂದ 10 ಗಂಟೆ ಸಮಯದಲ್ಲಿ ಭಾರಿ ಶಬ್ದ ಕೇಳಿಬಂದಾಗ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 19ನೇ ಕ್ರಸ್ಟ್‌ಗೇಟ್‌ನ ಸಂಪರ್ಕ ಕೊಂಡಿ ಕತ್ತರಿಸಿ, ನೀರಿನ ರಭಸಕ್ಕೆ ಗೇಟ್‌ ಕೊಚ್ಚಿ ಹೋಗಿ ನಾಪತ್ತೆಯಾಗಿದೆ. ಇದೊಂದೇ ಗೇಟ್‌ನಿಂದ ಸುಮಾರು 35 ಸಾವಿರ ಕ್ಯೂಸೆಕ್‌ ನೀರು ರಭಸವಾಗಿ ಹೊರಹರಿಯುತ್ತಿದ್ದು, ಅದರ ಒತ್ತಡದ ಪರಿಣಾಮ ಅಕ್ಕಪಕ್ಕದ ಗೇಟ್‌ಗಳ ಮೇಲೂ ಉಂಟಾಗಿದೆ. ಇದರಿಂದಾಗಿ ಅಣೆಕಟ್ಟೆಯ ಸುರಕ್ಷತೆಯ ಆತಂಕ ಹೆಚ್ಚಾಗಿದೆ ಎಂದು ಹೇಳಲಾಗಿದೆ.
4
+ ರಾಜ್ಯಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಸುರಕ್ಷತೆಗೆ ಮೊದಲ ಆದ್ಯತೆ ನೀಡುತ್ತಿದ್ದು, ಅದೇ ಸಮಯದಲ್ಲಿ ರೈತರ ಬೆಳೆಗಳಿಗೆ ನೀರನ್ನು ಉಳಿಸಿಕೊಳ್ಳುವ ಹರಸಾಹಸವೂ ನಡೆಯುತ್ತಿದೆ. ರಾಜ್ಯದಿಂದಷ್ಟೇ ಅಲ್ಲ, ದೇಶವಿದೇಶದಿಂದಲೂ ಅಣೆಕಟ್ಟು ತಜ್ಞರನ್ನು ಕರೆಸಿಕೊಳ್ಳಲಾಗಿದೆ.
5
+ ಸ್ವತಂತ್ರ್ಯಪೂರ್ವದಲ್ಲಿ ನಿರ್ಮಾಣಗೊಂಡ ಅಣೆಕಟ್ಟೆಯ ಮೂಲ ನೀಲನಕ್ಷೆ ಹೈದ್ರಾಬಾದ್‌ನಲ್ಲಿದ್ದು, ನಿನ್ನೆ ರಾತ್ರಿಯೇ ಅಣೆಕಟ್ಟು ನಿರ್ಮಾಣದಲ್ಲಿ ಭಾಗಿಯಾಗಿದ್ದ ಇಂಜಿನಿಯರ್‌ಗಳನ್ನು ಸಂಪರ್ಕಿಸಿ, ಮಾಹಿತಿ ಪಡೆಯುವುದರ ಜೊತೆಗೆ ಮೂಲನಕ್ಷೆಯನ್ನೂ ಪಡೆದುಕೊಳ್ಳುವ ಪ್ರಯತ್ನ ನಡೆಸಲಾಯಿತು. ಅದೃಷ್ಟವಶಾತ್‌ ಬೆಳಿಗ್ಗೆಯ ವೇಳೆಗೆ ಮೂಲನಕ್ಷೆಯನ್ನು ಜಲಾಶಯದ ಬಳಿಗೆ ತರಲಾಗಿದೆ.
6
+ ಜಲಾಶಯದಲ್ಲಿ 1,633 ಅಡಿ ನೀರು ನಿಂತಿದ್ದು, ಒಟ್ಟು ಸಂಗ್ರಹ 105 ಟಿಎಂಸಿ ಎಂದು ಹೇಳಲಾಗಿದೆ. ಕ್ರಸ್ಟ್‌ಗೇಟ್‌ಗಳನ್ನು ದುರಸ್ಥಿ ಮಾಡಲು ಕನಿಷ್ಟ 20 ಅಡಿ ನೀರು ಕೆಳಗೆ ಇಳಿಯಬೇಕಿದೆ. ಅದಕ್ಕಾಗಿ 60 ಟಿಎಂಸಿಯಷ್ಟು ಹೊರಗೆ ಹರಿಸಬೇಕು. 19ನೇ ಕ್ರಸ್ಟ್‌ಗೇಟ್‌ನಲ್ಲಿ 35 ಸಾವಿರ ಕ್ಯೂಸೆಕ್‌ ಹರಿಯುತ್ತಿದ್ದು, ಉಳಿದ 33 ಕ್ರಸ್ಟ್‌ಗೇಟ್‌ಗಳ ಪೈಕಿ 29 ಗೇಟ್‌ಗಳನ್ನು ತೆಗೆದು ಸರಿಸುಮಾರು 1.50 ಲಕ್ಷ ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ.
7
+ ಸರಾಸರಿ 2.50 ಲಕ್ಷ ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಿದರೆ 2-3 ದಿನಗಳಲ್ಲಿ 60 ಟಿಎಂಸಿ ಖಾಲಿಯಾಗಿ ದುರಸ್ಥಿ ಕಾರ್ಯಕ್ಕೆ ಅವಕಾಶವಾಗಬಹುದು ಎಂಬ ಮಾಹಿತಿ ಇದೆ.ಇಷ್ಟೂ ನೀರನ್ನು ಹೊರಗೆ ಹರಿಸಿದರೆ ರೈತರಿಗೆ ಅನ್ಯಾಯವಾಗುತ್ತದೆ ಎಂಬ ಆತಂಕಕಗಳೂ ಕೇಳಿಬಂದಿವೆ. ಈ ಬಾರಿ ಉತ್ತಮ ಮಳೆಯಾಗಿದ್ದರಿಂದಾಗಿ ವಾಡಿಕೆಗಿಂತಲೂ ಮೊದಲೇ ಜುಲೈ ಎರಡನೇ ವಾರದಲ್ಲೇ ಜಲಾಶಯ ಭರ್ತಿಯಾಗಿತ್ತು.
8
+ ಎರಡು ಬೆಳೆಗಳನ್ನು ಬೆಳೆಯಬಹುದು ಎಂಬ ಸಂತಸದಲ್ಲಿ ರೈತರಿದ್ದರು. ರಾಜ್ಯದ 10 ಲಕ್ಷ ಹೆಕ್ಟೇರ್‌, ನೆರೆಯ ಆಂಧ್ರಪ್ರದೇಶದಲ್ಲಿ 6 ಲಕ್ಷ ಹೆಕ್ಟೇರ��‌ ಜಮೀನುಗಳ ರೈತರು ಬಂಪರ್‌ ಬೆಲೆಯ ನಿರೀಕ್ಷೆಯಲ್ಲಿದ್ದಾಗಲೇ ಕ್ರಸ್ಟ್‌ಗೇಟ್‌ ಛಿದ್ರಗೊಂಡಿರುವುದು ಕೃಷಿಕರ ಕನಸನ್ನು ಭಗ್ನಗೊಳಿಸಿದೆ.ಒಂದು ವೇಳೆ 60 ಟಿಎಂಸಿಯನ್ನು ಹೊರಗೆ ಹರಿಸಿದರೆ ಒಂದು ಬೆಳೆಗೂ ನೀರು ಸಾಲುವುದಿಲ್ಲ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯನ್ನು ನಿಭಾಯಿಸಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಆತಂಕವಿದೆ.
9
+ ರಾಜ್ಯಸರ್ಕಾರ ಜಲಾಶಯದಲ್ಲಿ ನೀರನ್ನು ಉಳಿಸಿಕೊಂಡು ಕ್ರಸ್ಟ್‌ಗೇಟ್‌ ದುರಸ್ಥಿ ಮಾಡುವ ಬಗ್ಗೆಯೂ ಪರಿಶೀಲನೆ ನಡೆಸುತ್ತಿದೆ. ಆದರೆ ನೀರಿನ ರಭಸ ಅಪಾಯಮಟ್ಟ ಮೀರಿದ್ದು, ಈ ಹಂತದಲ್ಲಿ ಕ್ರಸ್ಟ್‌ಗೇಟ್‌ ಬಳಿ ಧಾವಿಸುವುದು ಮಾರಣಾಂತಿಕ ಎಂದು ಹೇಳಲಾಗುತ್ತಿದೆ.ನೀರಿನ ಮಟ್ಟ ತಗ್ಗಿದರೆ ಕ್ರೇನ್‌ ಮುಖಾಂತರ ಎರಡು ಹಂತದಲ್ಲಿ ಕ್ರಸ್ಟ್‌ಗೇಟ್‌ಗಳನ್ನು ಜೋಡಿಸಿ ದುರಸ್ಥಿ ಮಾಡಲು ಸಾಧ್ಯ ಎಂದು ತಿಳಿದುಬಂದಿದೆ.
10
+ ಏಕಾಏಕಿ ಅಷ್ಟೂ ನೀರನ್ನು ಒಮೆಲೇ ಹೊರಗೆ ಹರಿಸಿದರೆ ನದಿಪಾತ್ರದ ಕಾಲುವೆಗಳ ಗ್ರಾಮಗಳು ಮುಳುಗಡೆಯಾಗುವ ಅಥವಾ ಕೊಚ್ಚಿಹೋಗುವ ಅಪಾಯವಿದೆ. ನೀರನ್ನು ಹೊರಗೆ ಬಿಡದೇ ಇದ್ದರೆ 69 ವರ್ಷಗಳ ಹಿಂದೆ ಅಳವಡಿಸಲಾಗಿರುವ ಹಳೆಯ ಸಂಪರ್ಕ ಸರಪಳಿಗಳು ಒತ್ತಡಕ್ಕೆ ಒಳಗಾಗಿ ತುಂಡಾಗುವ, ಇದರಿಂದ ಅಣೆಕಟ್ಟೆಗೆ ಅಪಾಯವಾಗುವ ಆತಂಕವೂ ಇದೆ.
11
+ ಈಗ ತುಂಡಾಗಿರುವ 19ನೇ ಕ್ರಸ್ಟ್‌ಗೇಟ್‌ 17 ವರ್ಷಗಳ ಹಿಂದೆ ಇದೇ ರೀತಿ ಅಪಾಯಕ್ಕೆ ಸಿಲುಕಿತ್ತು. ಆಗ ದುರಸ್ಥಿ ಮಾಡಿ ಗೇಟ್‌ ಅನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು. ನೀರನ್ನು ಹೊರಗೆ ಬಿಡಲು 19ನೇ ಕ್ರಸ್ಟ್‌ಗೇಟ್‌ ಅನ್ನು ಬಳಸುತ್ತಿರಲಿಲ್ಲ. ಆದರೆ 17 ವರ್ಷಗಳ ಹಿಂದಿನ ವೆಲ್ಡಿಂಗ್‌ ಏಕಾಏಕಿ ತುಂಡಾಗಿದೆ ಎಂದು ಹೇಳಲಾಗಿದೆ.
12
+ ಹೀಗಾಗಿ ರಾಜ್ಯಸರ್ಕಾರ ಅಡ್ಡಕತ್ತರಿಯಲ್ಲಿ ಸಿಲುಕಿದಂತಾಗಿದ್ದು, ದೇಶ-ವಿದೇಶಗಳ ತಜ್ಞರನ್ನು ಕರೆಸಿ ಅಭಿಪ್ರಾಯ ಸಂಗ್ರಹಿಸುತ್ತಿದೆ.ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಥಳಕ್ಕೆ ತೆರಳಿದ್ದಾರೆ.
13
+ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಜ್‌ತಂಗಡಗಿ ಹಾಗೂ ಜನಪ್ರತಿನಿಧಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಜಲಸಂಪನೂಲ ಇಲಾಖೆಯ ಹಿರಿಯ ಅಧಿಕಾರಿಗಳು, ತಜ್ಞರು ಬೀಡುಬಿಟ್ಟಿದ್ದು ಅಣೆಕಟ್ಟೆಯ ಸುರಕ್ಷತೆಗೆ ಸಮರೋಪಾದಿಯ ಕಾರ್ಯಾಚರಣೆ ನಡೆಸುತ್ತಿದ್ದಾರೆ.
eesanje/url_46_49_1.txt ADDED
@@ -0,0 +1,7 @@
 
 
 
 
 
 
 
 
1
+ ನನಗೆ ಮನೆ ಇರಲಿಲ್ಲ ಎಂಬ ಸಿಎಂ ಹೇಳಿಕೆಗೆ ನಟ ಚೇತನ್‌ ಅಹಿಂಸಾ ಕಿಡಿ
2
+ ಬೆಂಗಳೂರು,ಆ.11-ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದರೂ ನನಗೆ ಮೈಸೂರಿನಲ್ಲಿ ಸ್ವಂತ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಟ ಚೇತನ್‌ ಅಹಿಂಸಾ ಕಿಡಿಕಾರಿದ್ದಾರೆ.
3
+ ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯ ಅಂತಹವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ನಟ ಚೇತನ್‌ ಅಹಿಂಸಾ ಹೇಳಿದ್ದಾರೆ.
4
+ ಈ ಬಗ್ಗೆ ಸಾಮಾಜಿಕ ಜಾಲತಾಣಲ್ಲಿ ಪ್ರತಿಕ್ರಿಯಿಸಿರುವ ಅವರು, 52 ಕೋಟಿ ಆಸ್ತಿ ಘೋಷಿಸಿದ್ದರೂ, ಸ್ವಂತ ಮನೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ವಿಪರ್ಯಾಸವೆಂದರೆ, ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್‌‍, ಬಿಜೆಪಿ, ಜೆಡಿಎಸ್‌‍ನಲ್ಲಿನ ಅವರ ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯನಂತವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ. ನಮ ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ತಿಳಿಸಿದ್ದಾರೆ.
5
+ ಸಿಎಂ ಸಿದ್ದರಾಮಯ್ಯಗೆ ನ್ಯಾಯದ ಪರಿಕಲ್ಪನೆ ಇಲ್ಲ, ಎಸ್ಸಿಎಸ್ಪಿ, ಟಿ.ಎಸ್‌‍.ಪಿ. ಯೋಜನೆಯ ಮೀಸಲು ಹಣವನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌‍ ಸರ್ಕಾರ ಸಾಮಾನ್ಯ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದರಿಂದ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿ ಕುಂಠಿತವಾಗಿದೆ.
6
+ ಈ ಅಸಮಾನತೆಯ ವ್ಯವಸ್ಥೆಯಲ್ಲಿ ಕಾಂಗ್ರೆಸ್‌‍ ಪಕ್ಷ ಮನುವಾದಿ, ಅಸಮಾನತಾವಾದಿ, ಶ್ರೀಮಂತರ ಪರವಾಗಿರುವ ಪಕ್ಷವಾಗಿದೆ. ಈ ಪಕ್ಷದಲ್ಲಿ ಬೆಳೆದಿರುವ ಸಚಿವ ಎಚ್‌.ಸಿ.ಮಹದೇವಪ್ಪ ಸೇರಿ ಹಲವರು, ದಲಿತರು, ಆದಿವಾಸಿಗಳಿಗೆ ಉದ್ದೇಶಪೂರ್ವಕವಾಗಿಯೇ ದೋಹ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
7
+ ಎಸ್ಸಿಎಸ್ಸಿ, ಟಿಎಸ್ಪಿ ಅನುದಾನ ಇರುವುದು ಗುಡಿಸಿನಲ್ಲಿರುವವರಿಗೆ ಮನೆ, ಶಿಕ್ಷಣ ರಸ್ತೆ, ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೆ. ಆದರೆ ಕಳೆದ ವರ್ಷ 12,500 ಕೋಟಿ, ಈ ವರ್ಷ 14,500 ಸಾವಿರ ಕೋಟಿ ದಲಿತರು, ಆದಿವಾಸಿಗಳ ಹಣ ಕಿತ್ತುಕೊಂಡು ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ, ಸಿಎಂಗೆ ನ್ಯಾಯದ ಪರಿಕಲ್ಪನೆ ಗೊತ್ತೇ ಇಲ್ಲ. ಪರಿವರ್ತನೆ ಮನಸ್ಥಿತಿ ಇಲ್ಲ ಎಂದು ಆಕೋಶ ಹೊರಹಾಕಿದ್ದಾರೆ.
eesanje/url_46_49_10.txt ADDED
@@ -0,0 +1,7 @@
 
 
 
 
 
 
 
 
1
+ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಆತಹತ್ಯೆ
2
+ ಬೆಂಗಳೂರು,ಆ.10-ನಿವೃತ್ತ ಸಹಾಯಕ ಕೃಷಿ ಅಧಿಕಾರಿಯೊಬ್ಬರು ಆತಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಜಿಬಿ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಬ್ದುಲ್‌ ರಷೀದ್‌(64) ಮೃತಪಟ್ಟ ನಿವೃತ್ತ ಅಧಿಕಾರಿ.
3
+ ಅಬ್ದುಲ್‌ ರಷೀದ್‌ ಅವರು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಮೇಲೆ ಪ್ರಕರಣವೊಂದು ದಾಖಲಾಗಿದ್ದು, ತನಿಖಾ ಹಂತದಲ್ಲಿದೆ. ಹಾಗಾಗಿ ಅವರಿಗೆ ಇನ್ನು ನಿವೃತ್ತಿ ವೇತನ ಸಿಕ್ಕಿರಲಿಲ್ಲ.
4
+ ಆ ಹಣವನ್ನೇ ನಂಬಿಕೊಂಡಿದ್ದ ಅಬ್ದುಲ್‌ ಅವರು ಇದರಿಂದ ಮನನೊಂದಿದ್ದರು. ನಿನ್ನೆ ಪತ್ನಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಇಬ್ಬರು ಮಕ್ಕಳೂ ಇರಲಿಲ್ಲ. ಆ ಸಂದರ್ಭದಲ್ಲಿ ಡೆತ್‌ನೋಟ್‌ ಬರೆದಿಟ್ಟು, ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು ಅಬ್ದುಲ್‌ ರಷೀದ್‌ ಅವರು ಆತಹತ್ಯೆ ಮಾಡಿಕೊಂಡಿದ್ದಾರೆ.
5
+ ಮನೆ ಮಾಲೀಕರು ನೋಡಿ ತಕ್ಷಣ ಅವರ ಪತ್ನಿಗೆ ತಿಳಿಸಿದ್ದಾರೆ. ನಂತರ ಪೊಲೀಸರಿಗೆ ವಿಷಯ ತಿಳಿದು ರಾತ್ರಿ 11 ಗಂಟೆ ಸುಮಾರಿನಲ್ಲಿ ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಡೆತ್‌ನೋಟ್‌ ಪತ್ತೆಯಾಗಿದೆ.
6
+ ನಾನು ಸೇವೆಯಿಂದ ನಿವೃತ್ತನಾಗಿ ನಾಲ್ಕು ವರ್ಷವಾದರೂ ನಿವೃತ್ತಿ ವೇತನ ಬಂದಿಲ್ಲ. ಹಾಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.
7
+ ಡೆತ್‌ನೋಟ್‌ ವಶಕ್ಕೆ ಪಡೆದಿರುವ ಪೊಲೀಸರು ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_49_11.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಮೈಸೂರಲ್ಲಿ ದೋಸ್ತಿಗಳ ಶಕ್ತಿಪ್ರದರ್ಶನ, ಕಾಂಗ್ರೆಸ್ಸಿಗರ ವಿರುದ್ಧ ಗರ್ಜನೆ
2
+ ಬೆಂಗಳೂರು,ಆ.10-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಮೈತ್ರಿಪಕ್ಷವು ಬೃಹತ್ ಸಮಾವೇಶದಲ್ಲಿ ಶಕ್ತಿಪ್ರದರ್ಶಿಸಿ ಒಗ್ಗಟ್ಟಿನ ಮಂತ್ರದ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
3
+ ನಮ ಹೋರಾಟ ಮೈಸೂರಿಗೆ ಮಾತ್ರ ಸೀಮಿತವಾಗು ವುದಿಲ್ಲ. ಸಿದ್ದರಾಮಯ್ಯನವರ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳನ್ನು ಮುಂದಿಟ್ಟುಕೊಂಡು ಬರುವ ದಿನಗಳಲ್ಲಿ ರಾಜ್ಯಾದ್ಯಂತ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂಬ ಶಪಥವನ್ನು ಉಭಯ ಪಕ್ಷಗಳ ಮುಖಂಡರು ಮಾಡಿದ್ದಾರೆ.
4
+ ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಸಮಾರೋಪ ಸಮಾರಂಭವು ಕಾಂಗ್ರೆಸ್ ಶುಕ್ರವಾರ ನಡೆಸಿದ್ದ ಸಮಾವೇಶಕ್ಕೆ ಭರ್ಜರಿ ತಿರುಗೇಟು ಎನ್ನುವಂತೆ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು.
5
+ ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯಾದ್ಯಂತ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿದ್ದರು.
6
+ ನಾಡಿನ ಮೂಲೆ ಮೂಲೆಗಳಿಂದಲೂ ಭಾರೀ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರಿಂದ ಮೈಸೂರು ಅಕ್ಷರಶಃ ಕೇಸರಿ ಹಾಗೂ ಹಸಿರುಮಯವಾಗಿತ್ತು. ವೇದಿಕೆಯಲ್ಲಿ ಮಾತನಾಡಿದ ಎರಡೂ ಪಕ್ಷಗಳ ಮುಖಂಡರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಕಿ ಉಗುಳಿದರು. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಅಶ್ವತ್‌್ಥ ನಾರಾಯಣ, ಬಿ.ಶ್ರೀರಾಮುಲು ಮತ್ತಿತರರು ಬಿಜೆಪಿ ಪರವಾಗಿ ಮಾತನಾಡಿದರು.ಜೆಡಿಎಸ್ ವತಿಯಿಂದ ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಸುರೇಶ್ ಬಾಬು, ನಿಖಿಲ್ಕುಮಾರಸ್ವಾಮಿ ಮತ್ತಿತರರು ಸರ್ಕಾರದ ವಿರುದ್ಧ ಕೆಂಡಕಾರಿದರು.
7
+ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ಹಗರಣಗಳನ್ನೇ ಗುರಿಯಾಗಿಟ್ಟುಕೊಂಡು ದೋಸ್ತಿ ಪಕ್ಷಗಳ ಮುಖಂಡರು ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಜನರಿಗೆ ಸುಳ್ಳು ಭರವಸೆಯನ್ನು ಕೊಟ್ಟು ಅಧಿಕಾರಕ್ಕೆ ಬಂದಿರುವ ಇವರನ್ನು ಮನೆ ಕಳುಹಿಸುವವರೆಗೂ ನಮ ಹೋರಾಟ ನಿಲ್ಲುವುದಿಲ್ಲ ಎಂದು ವಾಗ್ದಾನ ಮಾಡಿದರು.ಮಿಸ್ಟರ್ ಕ್ಲೀನ್ ಇಮೇಜ್ ಖ್ಯಾತಿಯ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಮೇಲೆ ಅಕ್ರಮ ಡಿನೋಟಿಫಿಕೇಷನ್ ಆರೋಪ ಕೇಳಿಬಂದಿದೆ. ಅವರು ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ನಾವು ನಮ ಹೋರಾಟವನ್ನು ಕೈ���ಿಡುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.
8
+ ನಮಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರಬಹುದು. ಅದನ್ನು ಹೇಗೆ ಸರಿಪಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತು. ನಮ ಹೋರಾಟ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಹೊರತು ಯಾವುದೇ ಒಬ್ಬ ವ್ಯಕ್ತಿಯ ಮೇಲಲ್ಲ ಎಂದು ಸ್ಪಷ್ಟಪಡಿಸಿದರು. ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದು ಅಧಿಕಾರ ಹಿಡಿದಿರುವ ಕಾಂಗ್ರೆಸ್ ಇಂದು ಎಲ್ಲಾ ರಾಜ್ಯಗಳಲ್ಲೂ ವಿಫಲವಾಗಿದೆ. ಲಂಚ ನೀಡದಿದ್ದರೆ ಯಾವ ಕೆಲಸವೂ ಆಗುವುದಿಲ್ಲ. ಸರ್ಕಾರ ಆದಷ್ಟು ಬೇಗ ತೊಲಗಿದರೆ ಸಾಕು ಎಂದು ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಆರೋಪ ಮಾಡಿದರು.
9
+ ಅದರಲ್ಲೂ ಕುಮಾರಸ್ವಾಮಿಯವರು ತಮ ಭಾಷಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಯೊಂದು ಆರೋಪಗಳಿಗೆ ತಿರುಗೇಟು ನೀಡಿದರು. ಈ ವೇಳೆ ನೆರೆದಿದ್ದ ಕಾರ್ಯಕರ್ತರಿಂದ ಹರ್ಷೋದ್ಘಾರ ಮುಗಿಲುಮುಟ್ಟಿತು.
10
+ ಇದಕ್ಕೂ ಮುನ್ನ ಎಂಟು ದಿನಗಳ ಹಿಂದೆ ಕೆಂಗೇರಿಯಿಂದ ಆರಂಭವಾಗಿದ್ದ ಪಾದಯಾತ್ರೆ ಬೆಳಗ್ಗೆ ಮೈಸೂರಿನ ಕೊಲಂಬಿಯಾ ಏಷಿಯಾ ಜಂಕ್ಷನ್ನಿಂದ ಆರಂಭವಾಯಿತು. ಅಲ್ಲಿಂದ ಪ್ರಮುಖ ರಸ್ತೆಗಳಲ್ಲಿ ದೋಸ್ತಿ ಪಕ್ಷಗಳ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಎರಡೂ ಪಕ್ಷಗಳ ನಾಯಕರಿಗೆ ಜೈಕಾರ ಹಾಕಿಕೊಂಡು ವೇದಿಕೆಗೆ ಆಗಮಿಸಿದರು.
11
+ ಪೊಲೀಸ್ ಬಿಗಿ ಭದ್ರತೆ:ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಹೆಚ್ಚಿನ ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಹಾಗೂ ಸುತ್ತಮುತ್ತ ನಾಲ್ಕು ಹಂತದ ಭದ್ರತೆ ಹಾಗೂ ಪ್ರಮುಖ ಸರ್ಕಲ್ಗಳಲ್ಲಿ ಭದ್ರತೆ ಒದಗಿಸಲಾಗಿತ್ತು.ವಾಹನ ನಿಲುಗಡೆ ಹಾಗೂ ಬದಲಿ ಸಂಚಾರ ಮಾರ್ಗಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಮೈಸೂರು ಚಲೋ ಸಮಾವೇಶದ ಭದ್ರತೆಗೆ 4,500 ಮಂದಿ ಪೊಲೀಸರು, ಮೂವರು ಡಿವೈಎಸ್ಪಿ, 22 ಇನ್‌್ಸಪೆಕ್ಟರ್ಗಳು , 175 ಎಸ್ಐ, 100 ಜನ ಕಮಾಂಡೋಗಳು , 500 ಹೋಂ ಗಾರ್ಡ್‌್ಸಗಳು ಹಾಗೂ ಕೆಎಸ್ಆರ್ಪಿ ಜೊತೆಗೆ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿತ್ತು.
eesanje/url_46_49_12.txt ADDED
@@ -0,0 +1,7 @@
 
 
 
 
 
 
 
 
1
+ ಸೋಮವಾರದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಲಿದೆ ಮಳೆ
2
+ ಬೆಂಗಳೂರು, ಆ.10-ಕಳೆದ ಒಂದು ವಾರದಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಮತ್ತೆ ಆಗಸ್ಟ್‌ 12ರಿಂದ ಚುರುಕಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕರಾವಳಿ, ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸೋಮವಾರದಿಂದ ಆ.15ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ.
3
+ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮುಂದುವರೆದಿದೆ. ಆದರೆ, ಭಾರೀ ಮಳೆಯಾಗುತ್ತಿಲ್ಲ. ಭಾರೀ ಮಳೆಯಾಗಿ ಜನಜೀವನ ತತ್ತರಿಸುವಂತೆ ಮಾಡಿದ್ದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆಗಳಿವೆ.
4
+ ಉತ್ತರ ಒಳನಾಡಿನಲ್ಲೂ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ವ್ಯಾಪಕವಾದ ಮಳೆಯಾಗುತ್ತಿದ್ದು, ಇನ್ನೆರಡು ದಿನದ ನಂತರ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ.
5
+ ಆಗಸ್ಟ್‌ ಒಂದರಿಂದ ಇದುವರೆಗೆ ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೆ, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ವಾಡಿಕೆ ಮಳೆಯಾಗಿದೆ. ಕೆಲವೆಡೆ ಕೊರತೆ ಮತ್ತೆ ಕೆಲವೆಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾದಂತಾಗಿದೆ.
6
+ ಕೇರಳದ ವಯನಾಡು, ಕೊಡಗು ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಪಿಲಾ, ಕಾವೇರಿ, ಹೇಮಾವತಿ, ತುಂಗಾ, ಭದ್ರಾ, ಶರಾವತಿ ನದಿಗಳ ಪ್ರವಾಹ ಇಳಿಕೆಯಾಗಿದೆ. ಪ್ರಮುಖ ಜಲಾಶಯಗಳ ಒಳ ಹರಿವು ಸಹ ಗಣನೀಯವಾಗಿ ಕಡಿಮೆಯಾಗಿದೆ.
7
+ ಅದೇ ರೀತಿ ನದಿಗೆ ಬಿಡಲಾಗುತ್ತಿದ್ದ ಹೊರ ಹರಿವು ಸಹ ಕಡಿಮೆಯಾಗಿದೆ. ಇದರಿಂದ ಆಯಾ ನದಿ ಪಾತ್ರದ ಜನರಿಗೆ ಉಂಟಾಗಿದ್ದ ಪ್ರವಾಹದ ಆತಂಕ ತಾತ್ಕಾಲಿಕವಾಗಿ ದೂರವಾಗಿದೆ. ಆದರೆ, ಕೃಷ್ಣಾ ಕೊಳ್ಳದ ತುಂಗಭದ್ರಾ, ಭೀಮಾ ಹಾಗೂ ಕೃಷ್ಣಾ ನದಿಗಳಲ್ಲಿ ಇನ್ನೂ ಪ್ರವಾಹದ ಪರಿಸ್ಥಿತಿ ದೂರವಾಗಿಲ್ಲ.
eesanje/url_46_49_2.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ತುಂಡಾದ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕೊಂಡಿ, ಆತಂಕದಲ್ಲಿ ಜನ
2
+ ಕೊಪ್ಪಳ,ಆ.11-ತಾಲ್ಲೂಕಿನ ಮುನಿರಾಬಾದ್‌ ಬಳಿಯಿರುವ ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್‌ಗೇಟ್‌ ಕೊಂಡಿ ತುಂಡಾಗಿ ಭಾರಿ ಪ್ರಮಾಣದ ನೀರು ನದಿಗೆ ಹರಿದುಹೋಗುತ್ತಿದ್ದು, ನದಿಪಾತ್ರದ ಜನರಲ್ಲಿ ಆತಂಕ ಹೆಚ್ಚಾಗಿದೆ.ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ನ ಚೈನ್‌ಲಿಂಕ್‌ ತುಂಡಾದ ಪರಿಣಾಮ ಸುಮಾರು 35 ಸಾವಿರ ಕ್ಯೂಸೆಕ್‌ ನೀರು ಹರಿದುಹೋಗುತ್ತಿದ್ದು, ನದಿಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.
3
+ ರಾತ್ರೋರಾತ್ರಿ ಕ್ರಸ್ಟ್‌ಗೇಟ್‌ ತುಂಡಾಗಿ ಭಾರಿ ಪ್ರಮಾಣದ ನೀರು ನದಿಗೆ ಹರಿದುಬರುತ್ತಿರುವ ಪರಿಣಾಮ ಹಂಪೆಯ ಸಾರಕಗಳು ಜಲಾವೃತಗೊಂಡಿವೆ.ನದಿಪಾತ್ರದಲ್ಲಿರುವ ಹೊಲಗದ್ದೆಗಳು ಜಲಮಯವಾಗಿವೆ. ನಿನ್ನೆ ರಾತ್ರಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ್‌ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
4
+ ಈ ಸಂದರ್ಭದಲ್ಲಿ ಮಾತನಾಡಿದ ಅವರು, 19ನೇ ಗೇಟ್‌ನ ವಾಸ್ತವ ಪತ್ತೆ ಹಚ್ಚಲು ಮತ್ತು ದುರಸ್ಥಿ ಮಾಡಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ದುರಸ್ಥಿ ಮಾಡಬೇಕಾದರೆ ಜಲಾಶಯದ 65 ಟಿಎಂಸಿ ನೀರನ್ನು ಖಾಲಿ ಮಾಡಬೇಕಾಗುತ್ತದೆ. 120 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಅರ್ಧದಷ್ಟು ನೀರನ್ನು ಖಾಲಿ ಮಾಡಲೇಬೇಕಾದ ಅನಿವಾರ್ಯತೆ ಇದೆ. 1633 ಅಡಿ ನೀರಿನಲ್ಲಿ 20 ರಿಂದ 25 ಅಡಿಯಷ್ಟು ನೀರನ್ನು ಖಾಲಿ ಮಾಡಿ ಹೊರಗೆ ಬಿಡಬೇಕು. 19ನೇ ಗೇಟ್‌ನಲ್ಲಿ 35 ಕ್ಯೂಸೆಕ್‌ ನೀರು ಹೋಗುತ್ತಿದ್ದು, ಉಳಿದ 30 ಗೇಟ್‌ಗಳಿಂದ ಒಟ್ಟು ಒಂದು ಲಕ್ಷ ಕ್ಯೂಸೆಕ್‌ ನೀರು ಹೊರಗೆ ಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
5
+ ಈ ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ. ಅವರೂ ಕೂಡ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ತಕ್ಷಣವೇ ದುರಸ್ಥಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಜಲಾಶಯದಿಂದ ಅಪಾರ ಪ್ರಮಾಣದ ನೀರು ಖಾಲಿ ಮಾಡುವುದರಿಂದ ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೂಡ ಎದುರಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.
6
+ ದೊಡ್ಡ ಪ್ರಮಾಣದಲ್ಲಿ ನೀರು ಹೊರಹೋಗುತ್ತಿರುವುದರಿಂದ 20 ಅಡಿಯಷ್ಟು ನೀರು ಖಾಲಿಯಾದಾಗ ಮಾತ್ರ ಗೇಟ್‌ ಏನಾಗಿದೆ ಎಂದು ನೋಡಲು ಸಾಧ್ಯ. ಗೇಟ್‌ ಚೈನ್‌ ಲಿಂಕ್‌ ಪೂರ್ಣ ತುಂಡಾಗಿರುವುದರಿಂದ ಗೇಟ್‌ ಎಲ್ಲಿದೆ ಎಂಬುದು ಗೊತ್ತಾಗುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ಇಂಜಿನಿಯರ್‌ಗಳು ಜಲಾಶಯ ಕಟ್ಟುವಾಗ ಇದ್ದಂತಹ ವಿನ್ಯಾಸಗಾರರ ಹತ್ತಿರವೂ ಡ್ಯಾಂ ನೀಲನಕ್ಷೆ ತರಿಸುತ್ತಿದ್ದೇವೆ. ತಜ್ಞರು ಹಾಗೂ ಅಣೆಕಟ್ಟೆಯ ವಿನ್ಯಾಸದ ನೀಲನಕ್ಷೆ ಬಂದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.
7
+ ಒಂದೇ ಬಾರಿಗೆ ನೀರನ್ನು ಅಣೆಕಟ್ಟೆಯಿಂದ ಹೊರಬಿಟ್ಟರೆ ಅಕ್ಕಪಕ್ಕದ ಹಳ್ಳಿಗಳಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ ಎಂದರು.
8
+ ಸದ್ಯ ಇರುವ ಮಾಹಿತಿ ಇರುವ ಪ್ರಕಾರ, 2.35 ಲಕ್ಷ ಕ್ಯೂಸೆಕ್‌ವರೆಗೆ ನೀರು ಬಿಡಬಹುದು. ಇದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ಹಳ್ಳಿಗಳು ಮುಳುಗುವುದಿಲ್ಲ. ಸ್ವಲ್ಪ ಮಟ್ಟಿಗೆ ಬೆಳೆಹಾನಿ ಆಗಬಹುದು. ಅಧಿಕ ನೀರು ಬಿಡುಗಡೆಯಾದರೆ ಹಾನಿಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.
9
+ ಬರದಿಂದ ತತ್ತರಿಸುತ್ತಿರುವ ಜನಕ್ಕೆ ಮಳೆ ಬಂದು ಸಂತಸವಾಗಿತ್ತು. ಜಲಾಶಯ ತುಂಬಿದ್ದರಿಂದ ಈ ಭಾಗದ ಜನ ಸಹಜವಾಗಿಯೇ ಖುಷಿಯಾಗಿದ್ದರು. ಬೆಳೆಗಳಿಗೆ, ಜನ-ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂಬ ನಿರೀಕ್ಷೆಯಿತ್ತು.
10
+ ಆದರೆ ರಾತ್ರೋರಾತ್ರಿ ಕ್ರಸ್ಟ್‌ಗೇಟ್‌ನ ಚೈನ್‌ಲಿಂಕ್‌ ತುಂಡಾಗಿ ನೀರು ಹರಿದುಹೋಗುತ್ತಿರುವುದು ಮತ್ತು ಇದನ್ನು ದುರಸ್ಥಿ ಮಾಡಲು ಅಣೆಕಟ್ಟೆಯಲ್ಲಿ ಸಂಗ್ರಹವಾಗಿರುವ ಅಪಾರ ಪ್ರಮಾಣದ ನೀರನ್ನು ಅನಗತ್ಯವಾಗಿ ಹೊರಬಿಡಬೇಕಾದ ಸನ್ನಿವೇಶ ಸೃಷ್ಟಿಯಾಗುವುದರಿಂದ ಮುಂದೆ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
11
+ 69 ವರ್ಷಗಳ ಹಿಂದೆ ನಿರ್ಮಿಸಲಾದ ಅಣೆಕಟ್ಟೆ ಚೈನ್‌ಲಿಂಕ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದಾಗಿ ತುಂಡಾಗಿದೆ. ಈ ಬಾರಿ ಉತ್ತಮ ಮಳೆಯಿಂದಾಗಿ ಜಲಾಶಯ ತುಂಬಿ ತುಳುಕುತ್ತಿದೆ. ಆದರೆ ಆ ನೀರನ್ನು ಹಿಡಿದಿಟ್ಟುಕೊಳ್ಳುವಂತಹ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬ ಟೀಕೆಗಳು ಕೇಳಿಬಂದಿವೆ.
eesanje/url_46_49_3.txt ADDED
@@ -0,0 +1,8 @@
 
 
 
 
 
 
 
 
 
1
+ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಗಗನಕ್ಕೇರಿದ ಬಾಳೆಹಣ್ಣಿನ ಬೆಲೆ
2
+ ಬೆಂಗಳೂರು, ಆ.11– ಶ್ರಾವಣ ಮಾಸದಲ್ಲಿ ಸರಣಿ ಹಬ್ಬಗಳು… ಶುಭ ಸಮಾರಂಭಗಳು ಹೆಚ್ಚಾಗಿ ನಡೆಯುತ್ತವೆ. ಪೂಜೆಗೆ ಅಗತ್ಯವಾಗಿ ಬೇಕಾಗಿರುವ ಬಾಳೆಹಣ್ಣಿನ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದ್ದು, ವರಮಹಾಲಕ್ಷ್ಮಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
3
+ ಕಳೆದ ಕೆಲವು ತಿಂಗಳುಗಳ ಹಿಂದೆ ಕೆಜಿಗೆ 50ರಿಂದ 60ರೂ.ಗೆ ಮಾರಾಟವಾಗುತ್ತಿದ್ದ ಏಲಕ್ಕಿ ಬಾಳೆಹಣ್ಣು ಈಗ 120 ರಿಂದ 150ರೂ.ಗೆ ಮಾರಾಟವಾಗುತ್ತಿದೆ. ಇದರಿಂದ ರಸ್ತೆಬದಿಯಲ್ಲಿ ತಳ್ಳುವ ಗಾಡಿಯಲ್ಲಿ ಬಾಳೆಹಣ್ಣು ಮಾರುವವರು, ಹಣ್ಣಿನ ಮಾರಾಟವಾಗದೆ ಸಂಕಷ್ಟದಲ್ಲಿದ್ದಾರೆ. ಬಹಳಷ್ಟು ಬಾರಿ ಅವರು ಕೆಜಿಗೆ 100ರೂ. ಮುಟ್ಟಿದಾಗ ಬಾಳೆಹಣ್ಣು, ಮಾರಾಟ ಮಾಡಲಾಗದೆ, ಗಿರಾಕಿಗಳಿಗೂ ಸಹ ಉತ್ತರ ನೀಡಲಾರದೆ ಪರಿತಪಿಸುವಂತಾಗಿದೆ.
4
+ ರೈತರಿಂದ ನೇರವಾಗಿ ಖರೀದಿ ಮಾಡಿ, ಮನೆಯಲ್ಲಿ ಹಣ್ಣು ಹಾಕಿ, ಅವುಗಳನ್ನು ಸಂಗ್ರಹಿಸಿಟ್ಟುಕೊಂಡು, ಕಾಲಕ್ಕೆ ಸರಿಯಾಗಿ ಜನಸಾಮಾನ್ಯರಿಗೆ, ನಾಗರಿಕರಿಗೆ ತಲುಪಿಸುವಂತಹ ಕೆಲಸ ಮಾಡುತ್ತಿರುವ ಬಾಳೆಹಣ್ಣಿನ ವ್ಯಾಪಾರಿಗಳು ಸಹ ಈ ತುಟ್ಟಿಯಾದ ಬಾಳೆಹಣ್ಣಿನ ಬಗ್ಗೆ ನೊಂದು, ಅಸಹಾಯಕರಾಗಿದ್ದಾರೆ.
5
+ ಬಾಳೆಹಣ್ಣನ್ನು ಬಹಳ ದಿವಸ ಇಟ್ಟು ಮಾರಲಾಗುವುದಿಲ್ಲ. ಹಣ್ಣಾದ ಕೂಡಲೇ ಬೆಲೆ ಹೆಚ್ಚಾಗಿರಲಿ, ಕಡಿಮೆಯಾಗಿರಲಿ ಮಾರಾಟ ಮಾಡಲೇಬೇಕೆಂಬುದು ರೈತರು ಮತ್ತು ವ್ಯಾಪಾರಿಗಳ ಮಾತಾಗಿದೆ.ಬಾಳೆಹಣ್ಣು ಬೆಳಗಾರರಿಗೆ ಸಂಕಷ್ಟಗಳಿವೆ. ಬಾಳೆ ಬೆಳೆಗೆ ಹೆಚ್ಚಿನ ನೀರು, ಔಷಧಿ ಗಳ ಸಿಂಪಡಣೆ, ಕೂಲಿಕಾರ್ಮಿಕರ ಅಭಾವ, ಸಾಗಾಣಿಕೆ ವೆಚ್ಚ, ಸಂಗ್ರಹಿಸಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು,
6
+ ಮಳೆ ನೀರಿನ ಅಭಾವ, ರೋಗ-ರುಜಿನಗಳು, ಮಾರುಕಟ್ಟೆಯಲ್ಲಿ ನಿಗದಿಯಾದ ಬೆಲೆ ಸಿಗದಿರುವುದು, ಮಧ್ಯವರ್ತಿಗಳಿಂದ ಶೋಷಣೆ, ಸಾಗಾಣಿಕೆಯಲ್ಲಿ ಬಹಳಷ್ಟು ಹಣ್ಣಿನ ನಾಶ, ಹೀಗೆ ಬಹಳಷ್ಟು ಸಮಸ್ಯೆಗಳಿಂದ ರೈತರು ಬಳಲುತ್ತಿದ್ದು, ಮಾರುಕಟ್ಟೆಗೆ ಸಮ ಪ್ರಮಾಣದಲ್ಲಿ ಬಾಳೆಹಣ್ಣನ್ನು ಒದಗಿಸಲು ಸಾಧ್ಯವಾಗದೆ ಬೆಲೆ ಏರಿಕೆಯಾಗಿದೆ ಎಂದು ಕೃಷಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
7
+ ರೈತರಿಂದ ಅರ್ಧ ಬೆಲೆಗೆ ಖರೀದಿ ಮಾಡಿ ತಂದು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾರೆ. ಇಲ್ಲಿ ವ್ಯಾಪಾರಿಗಳಿಗೂ ಲಾಭವಿಲ್ಲ, ರೈತರಿಗೂ ಲಾಭವಿರುವುದಿಲ್ಲ. ಮಧ್ಯವರ್ತಿಗಳಿಗೆ ಮಾತ್ರ ಹೆಚ್ಚಿನ ಲಾಭವಾಗುತ್ತಿದೆ.
8
+ ವರಮಹಾಲಕ್ಷ್ಮಿ, ಶ್ರೀ ಕೃಷ್ಣ ಜನಾಷ್ಠಮಿ, ಶ್ರಾವಣ ಶನಿವಾರ, ಗೌರಿ-ಗಣೇಶ ಸೇರಿದಂತೆ ಹಲವಾರು ಹಬ್ಬಗಳು ಬರಲಿದ್ದು, ಯಾಲಕ್ಕಿ ಬಾಳೆ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕೆಜಿಗೆ 20 ರಿಂದ 30ರೂ.ಗೆ ಮಾರಾಟವಾಗುತ್ತಿದ್ದ ಪಚ್ಚಬಾಳೆಹಣ್ಣಿನ ಬೆಲೆಯೂ ಸಹ ಹೆಚ್ಚಾಗಲಿದೆ.
eesanje/url_46_49_4.txt ADDED
@@ -0,0 +1,8 @@
 
 
 
 
 
 
 
 
 
1
+ ಖಾಸಗಿ ಕಾಲೇಜುಗಳ ಪದವಿ ತರಗತಿಗಳಿಗೂ ಸರ್ಕಾರಿ ಕೋಟಾದಡಿ ಸೀಟು
2
+ ಬೆಂಗಳೂರು,ಆ.10-ಇಂಜಿನಿಯರಿಂಗ್‌ ಹಾಗೂ ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಮಾದರಿಯಲ್ಲಿಯೇ ಬಿಎ, ಬಿಎಸ್ಸಿ, ಬಿಕಾಂ ಸೇರಿದಂತೆ ವಿವಿಧ ಪದವಿ ಕೋರ್ಸ್‌ಗಳಿಗೂ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಸೀಟು ಹಂಚಿಕೆ ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.
3
+ ಈ ಕ್ರಮದಿಂದ ಖಾಸಗಿ ಪದವಿ ಕಾಲೇಜುಗಳಿಗೆ ಇಲಾಖೆ ಬಿಗ್‌ ಶಾಕ್‌ ನೀಡಿದೆ. ಇನ್ನು ಮುಂದೆ ಪ್ರತಿಷ್ಠಿತ ಖಾಸಗಿ ಪದವಿ ಕಾಲೇಜುಗಳಲ್ಲಿಯೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ದೊರೆಯಲಿದೆ.
4
+ ಇಂಜಿನಿಯರಿಂಗ್‌ ಹಾಗೂ ವೈದ್ಯಕೀಯ ಸೀಟು ಹಂಚಿಕೆ ಮಾದರಿಯಲ್ಲಿ ಖಾಸಗಿ ಪದವಿ ಕಾಲೇಜುಗಳಲ್ಲಿ ಶೇ.40 ರಷ್ಟು ಸರ್ಕಾರಿ ಕೋಟಾದಡಿ ಯಲ್ಲಿ ಪದವಿ ಸೀಟುಗಳನ್ನು ಪಡೆಯಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.
5
+ ಹಾಗಾಗಿ ಶೇ.40 ರಷ್ಟು ಸರ್ಕಾರಿ ಸೀಟುಗಳನ್ನು ವಿದ್ಯಾರ್ಥಿಗಳು ಈ ವರ್ಷದಿಂದಲೇ ಪಡೆಯಬಹುದಾಗಿದೆ. ಖಾಸಗಿ ಕಾಲೇಜುಗಳಲ್ಲಿ ಪದವಿ ಪಡೆಯಲು ಉದ್ದೇಶಿಸಿದ್ದ ವಿದ್ಯಾರ್ಥಿಗಳಿಗೆ ಇದು ಖುಷಿ ವಿಷಯವಾಗಿದೆ. ಈ ಸೀಟುಗಳನ್ನು ಕೆಇಎ ಅಥವಾ ಕಾಮೆಡ್‌-ಕೆ ಮಾದರಿಯಲ್ಲಿ ಹಂಚಿಕೆ ಮಾಡಲು ಚಿಂತನೆ ನಡೆಸಿದೆ.
6
+ ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ಸೇರಿದಂತೆ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿರಲಿಲ್ಲ. ಅವರು ಸರ್ಕಾರಿ ಕಾಲೇಜುಗಳನ್ನು ಅವಲಂಬಿಸಬೇಕಾಗಿತ್ತು. ಉಳ್ಳವರು ಮಾತ್ರ ಪ್ರತಿಷ್ಠಿತ ಕಾಲೇಜುಗಳಲ್ಲಿ ಪದವಿಗೆ ಪ್ರವೇಶ ಪಡೆಯುತ್ತಿದ್ದರು.
7
+ ಕೇಳಿದಷ್ಟು ಡೊನೇಷನ್‌ ನೀಡಿ ಪ್ರವೇಶ ಪಡೆದು ಉನ್ನತ ಹುದ್ದೆಗಳಿಗೆ ಹೋಗುತ್ತಿದ್ದರು. ಈಗ ಸರ್ಕಾರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ಸರ್ಕಾರಿ ಸೀಟುಗಳ ಮೂಲಕ ಪ್ರವೇಶ ಪಡೆಯಬಹುದಾಗಿದೆ.
8
+ ಈ ಹಿಂದೆ ಖಾಸಗಿ ಪದವಿ ಕಾಲೇಜುಗಳು ಶೇ.100 ಕ್ಕೆ 100 ರಷ್ಟು ಮ್ಯಾನೇಜ್‌ಮೆಂಟ್‌ ಕೋಟಾದಡಿ ದಾಖಲಾತಿ ಮಾಡಿಕೊಳ್ಳುತ್ತಿದ್ದರು. ಖಾಸಗಿ ಕೋಟಾದಡಿಯೇ ದಾಖಲಾತಿ ನಡೆಯುತ್ತಿತ್ತು. ಹೀಗಾಗಿ ಪ್ರತಿಷ್ಠಿತ ಕಾಲೇಜುಗಳಲ್ಲಿ ಓದಲು ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶುಲ್ಕ ಕಟ್ಟಲಾಗದೇ ಪರದಾಡುತ್ತಿದ್ದರು. ಸರ್ಕಾರದ ಈ ಕ್ರಮದಿಂದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
eesanje/url_46_49_5.txt ADDED
@@ -0,0 +1,6 @@
 
 
 
 
 
 
 
1
+ ಭ್ರಷ್ಟ ಸರ್ಕಾರ ಪತನಗೊಳ್ಳುವವರೆಗೂ ಹೋರಾಟ : ಅಬ್ಬರಿಸಿದ ಹೆಚ್ಡಿಕೆ
2
+ ಮೈಸೂರು, ಆ.10-ರಾಜ್ಯದ ಕಾಂಗ್ರೆಸ್‌‍ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಈ ಸರ್ಕಾರ ಸರಿ ಹೋಗಬೇಕು. ಇಲ್ಲದಿದ್ದರೆ ಪತನಗೊಳಿಸುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.
3
+ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುತ್ತೇವೆ ಎಂದು ಎಲ್ಲೂ ಹೇಳಿಲ್ಲ ಎಂದರು.ಖಾಕಿ ಚಡ್ಡಿ ಹಾಕಿದ್ದಾರೆಂದು ನನ್ನ ಬಗ್ಗೆ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಡ್ಡಿ ಎಲ್ಲವೂ ಕಪ್ಪು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು..
4
+ ರಾಜ್ಯದಲ್ಲಿ 136 ಸ್ಥಾನ ಗೆದ್ದಿದ್ದು, ಸಿದ್ದರಾಮಯ್ಯ ಅವರಿಗೆ ಕಲ್ಲುಬಂಡೆಯಾಗಿ ನಿಂತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದೇ ರೀತಿ ಈ ಹಿಂದೆ ನನಗೂ ಶಿವಕುಮಾರ್‌ ಹೇಳಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍​ನವರು 9ನೇ ಸ್ಥಾನವನ್ನು ಹೇಗೆ ಗೆದ್ದಿದ್ದಾರೆ ಗೊತ್ತಿದೆ. ಅದಕ್ಕೆ ನಾನು 8 ಸ್ಥಾನ ಗೆದ್ದಿದ್ದಾರೆ ಎಂದು ಹೇಳುತ್ತೇನೆ ಎಂದರು.
5
+ ನನ್ನ ಕಂಡರೆ ಹೊಟ್ಟೆಉರಿ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಳ್ಳೆಯ ಆಡಳಿತ ನೀಡಿದರೆ ನಮಗೆ ಯಾಕೆ ಹೊಟ್ಟೆಉರಿ. ನನ್ನ ಮೇಲೆ ಒಂದು ಕಪ್ಪುಚುಕ್ಕೆ ಇಲ್ಲವೆಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ಮುಖ್ಯಮಂತ್ರಿ ಅಲ್ಲ, ರಾಜ್ಯದ ಆರೂವರೆ ಕೋಟಿ ಜನರ ಮುಖ್ಯಮಂತ್ರಿ ಎಂದು ವಾಗ್ದಾಳಿ ನಡೆಸಿದರು.
6
+ ಕಾನೂನು ಬಾಹಿರವಾಗಿ ಸೈಟ್‌ ಪಡೆದ ಬಗ್ಗೆ ಪ್ರಶ್ನೆ ಮಾಡ್ತಿದ್ದೇವೆ. ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಎಂದಿದ್ದಾರೆ. ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ನಾವು ಪ್ರಶ್ನೆ ಮಾಡುತ್ತಿರಲಿಲ್ಲ. ಸಿದ್ದರಾಮಯ್ಯಅವರಿಗೆ ಕೊಟ್ಟಿರುವುದು ಸರ್ಕಾರದ ಭೂಮಿ. ಮುಖ್ಯಮಂತ್ರಿ ಮೂಗಿನ ನೇರವಾಗಿ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಈಗಲೂ ನಾನು 14 ನಿವೇಶನ ಮರಳಿಸಲು ಸಿದ್ಧ ಎಂದಿದ್ದಾರಂತೆ. ನಿವೇಶನ ಹಿಂದಿರುಗಿಸಿದರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವೆ? ಎಂದು ಪ್ರಶ್ನಿಸಿದರು.
eesanje/url_46_49_6.txt ADDED
@@ -0,0 +1,6 @@
 
 
 
 
 
 
 
1
+ 2 ಮಕ್ಕಳ ತಾಯಿಗೆ ಬಾಳು ಕೊಡುವುದಾಗಿ ನಂಬಿಸಿ ಕೈ ಕೊಟ್ಟ ಕ್ಯಾಬ್‌ ಡ್ರೈವರ್
2
+ ಬೆಂಗಳೂರು,ಆ.10-ಎರಡು ಮಕ್ಕಳ ತಾಯಿಯ ರೀಲ್ಸ್ ನೋಡಿ ಮೆಚ್ಚಿಕೊಂಡು ಆಕೆಗೆ ಬಾಳು ಕೊಡುವುದಾಗಿ ಮರುಳು ಮಾಡಿದ ಕ್ಯಾಬ್‌ ಚಾಲಕ ಇದೀಗ ಕೈಕೊಟ್ಟು ಹೋಗಿದ್ದು, ಆ ಮಹಿಳೆ ನ್ಯಾಯಕ್ಕಾಗಿ ಪೊಲೀಸ್‌‍ ಠಾಣೆ ಮೆಟ್ಟಿಲೇರಿದ್ದಾಳೆ.ಹದಿಮೂರು ವರ್ಷದ ಹಿಂದೆ ಈ ಮಹಿಳೆ ಮದುವೆಯಾಗಿದ್ದು, 12 ಹಾಗೂ 10 ವರ್ಷದ ಇಬ್ಬರು ಮಕ್ಕಳಿದ್ದಾರೆ. ಗಂಡ ಕುಡಿದು ಬಂದು ಕಿರುಕುಳ ನೀಡುತ್ತಿದ್ದರಿಂದ ಬೇಸತ್ತು ಆಕೆ ಗಂಡನನ್ನು ತೊರೆದು ಇಬ್ಬರು ಮಕ್ಕಳನ್ನು ಕರೆದುಕೊಂಡು ತವರು ಮನೆ ಸೇರಿದ್ದಾಳೆ.
3
+ ನಂತರದ ದಿನಗಳಲ್ಲಿ ವಿದ್ಯಾಭ್ಯಾಸಕ್ಕಾಗಿ ಮಗನನ್ನು ಹಾಸ್ಟೆಲ್‌ಗೆ ಸೇರಿಸಿ ಮಗಳನ್ನು ತವರುಮನೆಯಲ್ಲಿಯೇ ಬಿಟ್ಟು ಒಂದು ವರ್ಷದ ಹಿಂದೆ ನಗರಕ್ಕೆ ಬಂದ ಮಹಿಳೆ ಜೀವನೋಪಾಯಕ್ಕಾಗಿ ಪೆಟ್ರೋಲ್‌ಬಂಕ್‌ನಲ್ಲಿ ಕೆಲಸ ಮಾಡಿಕೊಂಡು ಕೆಂಗೇರಿಯಲ್ಲಿ ಸ್ನೇಹಿತೆಯರ ಜೊತೆ ರೂಂ ಮಾಡಿಕೊಂಡು ವಾಸಿಸುತ್ತಿದ್ದರು.
4
+ ಈ ನಡುವೆ ಆ ಮಹಿಳೆ ರೀಲ್‌್ಸ ಮಾಡುತ್ತಿದ್ದರು. ಈಕೆಯ ರೀಲ್ಸ್ ನೋಡುತ್ತಿದ್ದ ಕ್ಯಾಬ್‌ ಚಾಲಕನೊಬ್ಬ ಅದನ್ನು ಲೈಕ್‌ ಮಾಡಿ, ಬ್ಯೂಟಿಫುಲ್‌ ಎಂದು ಕಮೆಂಟ್‌ ಮಾಡಿದ್ದಾನೆ. ತದನಂತರದಲ್ಲಿ ಇವರಿಬ್ಬರೂ ಪರಿಚಯವಾಗಿ ಮೊಬೈಲ್‌ ನಂಬರ್‌ ಪಡೆದು ಆಗಾಗ್ಗೆ ಚಾಟಿಂಗ್‌ ಮಾಡುತ್ತಾ ಭೇಟಿ ಮಾಡಿ ಪರಸ್ಪರ ಮಾತುಕತೆ ನಡೆಸಿದ್ದಾರೆ.
5
+ ಆ ಸಂದರ್ಭದಲ್ಲಿ ಆ ಮಹಿಳೆ ತನಗೆ ಇಬ್ಬರು ಮಕ್ಕಳಿದ್ದಾರೆ ಎಂದು ತನ್ನ ಕುಟುಂಬದ ಬಗ್ಗೆ ಹೇಳಿಕೊಂಡಿದ್ದಾಳೆ. ಕ್ಯಾಬ್‌ ಚಾಲಕ ನಿನಗೆ ಬಾಳು ಕೊಡುವುದಾಗಿ ಹೇಳಿದ್ದಾನೆ. ರೂಂನ ಸ್ನೇಹಿತೆಯರು ಬೇರೆ ಮನೆ ಮಾಡಿಕೊಂಡು ಹೋಗಿದ್ದಾರೆ. ಕ್ಯಾಬ್‌ ಚಾಲಕ ನಂತರದ ದಿನಗಳಲ್ಲಿ ಆಕೆಯ ಜೊತೆ ಈ ಮನೆಯಲ್ಲಿ ನೆಲೆಸಿದ್ದು, ಇದೀಗ ಆತ ಆಕೆಯನ್ನು ಬಿಟ್ಟು ಹೋಗಿದ್ದಾನೆ.
6
+ ಇದೀಗ ಕ್ಯಾಬ್ ಚಾಲಕನ ವಿರುದ್ಧ ಆ ಮಹಿಳೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಆಕೆಯ ದೂರನ್ನು ಆಲಿಸಿ ಕ್ಯಾಬ್ ಚಾಲಕನನ್ನು ಕರೆಸಿ ವಿಚಾರಿಸಿದಾಗ ಆಕೆ ಗಂಡನಿಂದ ವಿಚ್ಛೇದನ ಪಡೆದರೆ ನಾನು ಆಕೆಗೆ ಬಾಳು ಕೊಡುವುದಾಗಿ ಹೇಳಿದ್ದಾನೆ.ಈಗ ಆ ಮಹಿಳೆ ಗಂಡನಿಂದ ವಿಚ್ಛೇದನಕ್ಕಾಗಿ ದಾಖಲೆ ತರಲು ಹೋಗಿದ್ದಾರೆ.
eesanje/url_46_49_7.txt ADDED
@@ -0,0 +1,5 @@
 
 
 
 
 
 
1
+ ಹಿರಿಯ ಐಪಿಎಸ್‌‍ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧದ ಪ್ರಕರಣ ರದ್ದು
2
+ ಬೆಂಗಳೂರು,ಆ.10-ಹಿರಿಯ ಐಪಿಎಸ್‌‍ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಮಮತಾ ಸಿಂಗ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ ತನಿಖೆಗೆ ಅನುಮತಿ ನೀಡಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹಾಗೂ ಅದನ್ನು ರದ್ದುಪಡಿಸುವಂತೆ ಕೋರಿ ಅಲೋಕ್ಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
3
+ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಗರದ 39 ನೇ ಎಸಿಎಂಎಂ ಕೋರ್ಟ್‌ ಅರ್ಜಿದಾರರ ವಿರುದ್ಧ ನಡೆಸುತ್ತಿದ್ದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.
4
+ ವಿಚಾರಣಾ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಇಲ್ಲದೇ ಪ್ರಾಸಿಕ್ಯೂಷನ್‌ಗೆ ಒಳಪಡಿಸಲು ದಂಡ ಪ್ರಕ್ರಿಯೆ ಸಂಹಿತೆಯ ಸೆಕ್ಷನ್‌ 195 ರ ಅಡಿ ಅವಕಾಶವಿಲ್ಲ.
5
+ ಇದರ ಹೊರತಾಗಿ ವಿಚಾರಣಾ ನ್ಯಾಯಾಲಯವು ಸಂಜ್ಞೆಯ ಅಪರಾಧವೆಂದು ಪರಿಗಣಿಸಿ ಪ್ರಾಸಿಕ್ಯೂಷನ್‌ ನಡೆಸಲು ಅನುಮತಿಸಿರುವುದು ಸೂಕ್ತವಲ್ಲ. ಇನ್ನು ದೂರುದಾರರಾದ ಮಮತಾ ಸಿಂಗ್‌ ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.ವಾದ ಪರಿಗಣಿಸಿದ ಹೈಕೋರ್ಟ್‌ ಅಲೋಕ್‌ ಕುಮಾರ್‌ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.
eesanje/url_46_49_8.txt ADDED
@@ -0,0 +1,5 @@
 
 
 
 
 
 
1
+ ಸ್ವಾತಂತ್ರ್ಯ ದಿನಾಚರಣೆಗೆ ಗದಗ್‌ನ ಇಬ್ಬರು ವಿದ್ಯಾರ್ಥಿಗಳಿಗೆ ಮೋದಿ ಆಹ್ವಾನ
2
+ ಗದಗ,ಆ.10-ಗದಗ್‌ನ ಇಬ್ಬರು ಎನ್‌ಎಸ್‌‍ಎಸ್‌‍ ವಿದ್ಯಾರ್ಥಿಗಳ ಕಾರ್ಯವೈಖರಿ ಮೆಚ್ಚಿ ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನ ನೀಡಿದ್ದಾರೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಎನ್‌ಎಸ್‌‍ಎಸ್‌‍ ಘಟಕದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು. ಈ ಇಬ್ಬರು ವಿದ್ಯಾರ್ಥಿಗಳ ಕಾರ್ಯವೈಖರಿಯನ್ನು ಮೆಚ್ಚಿದ ಪ್ರಧಾನಿ ನರೇಂದ್ರಮೋದಿಯವರು ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದಾರೆ.
3
+ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಯದಲ್ಲಿ ಮಹಾಗನಿ ಹಾಗೂ ತಬೀಗ್‌ರೋಸಾ ಜಾತಿಯ ಗಿಡಗಳನ್ನು ವಿದ್ಯಾರ್ಥಿಗಳು ನೆಟ್ಟು ಪಾಲನೆ, ಪೋಷಣೆ ಮಾಡಿದ್ದಾರೆ. ಈ ಪೈಕಿ ಗಿಡಗಳ ಪೋಷಣೆಯಲ್ಲಿ ತೊಡಗಿದ್ದ ಪಿಯುಸಿ ಓದುತ್ತಿರುವ ಸತೀಶ್‌ ಕನ್ನೇರ ಹಾಗೂ ಆದಿತ್ಯ ಕೊರವರ್‌ ಎನ್ನುವ ವದ್ಯಿರ್ಥಿಗಳಿಗೆ ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಬಂದಿದೆ.
4
+ ಕೇಂದ್ರ ಸರ್ಕಾರದ ಮೇರಿ ಮುಟ್ಟಿ ಮೇರಾ ದೇಶ್‌ (ನನ್ನ ಮಣ್ಣು ನನ್ನ ದೇಶ) ಎನ್ನುವ ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌‍ಎಸ್‌‍ ಘಟಕ ಯಶಸ್ವಿಯಾಗಿ ನಡೆಸಿದೆ. ಒಂದು ವರ್ಷದ ಪರ್ಯಂತ ಅಮೃತವಾಟಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದೆ. ಎನ್‌ಎಸ್‌‍ಎಸ್‌‍ ಘಟಕದ 100 ವಿದ್ಯಾರ್ಥಿಗಳು ಕಾಲೇಜು ಮುಂದೆ 50 ಗಿಡಗಳನ್ನು ನೆಟ್ಟು ಮಗುವಿನಂತೆ ಪಾಲನೆ, ಪೋಷಣೆ ಮಾಡಿದ್ದಾರೆ. ಈ ಗಿಡಗಳನ್ನು ಪೋಷಣೆ ಮಾಡಿದ್ದ ಕುರಿತು ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರ ಹಾಗೂ ಎನ್‌ಎಸ್‌‍ಎಸ್‌‍ ಘಟಕದ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡಲಾಗುತ್ತಿತ್ತು.
5
+ ಈ ನೂರು ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳು ಗಿಡಗಳನ್ನು ಅಚ್ಚುಕಟ್ಟಾಗಿ ಬೆಳೆಸಿದ್ದನ್ನು ಗಮನಿಸಿ ಅವರಿಗೆ ಪ್ರಧಾನಿ ಕಚೇರಿಯಿಂದ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಗಳಾಗಿ ಆಹ್ವಾನ ನೀಡಲಾಗಿದೆ.ಇದು ನಮ ಕಾಲೇಜಿನ ಹೆಮೆ ಎಂದು ಕಾಲೇಜು ಉಪನ್ಯಾಸಕರು ಹೇಳಿದ್ದಾರೆ.
eesanje/url_46_49_9.txt ADDED
@@ -0,0 +1,5 @@
 
 
 
 
 
 
1
+ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತೆ : ವಿಜಯೇಂದ್ರ
2
+ ಮೈಸೂರು, ಆ.10-ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೋ ಇಲ್ಲವೋ ಮುಂದಿನ ದಿನಗಳಲ್ಲಿ ತಿಳಿಯುತ್ತದೆ.
3
+ ಅವರು ರಾಜೀನಾಮೆ ನೀಡಲೇಬೇಕಾದ ಪರಿಸ್ಥಿತಿ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಂದು ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ ಪಾದಯಾತ್ರೆಯ ಪರಿಣಾಮದಿಂದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲೇಬೇಕಾಗುತ್ತದೆ ಎಂದರು.
4
+ ಇಂದು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸಮಾವೇಶವನ್ನು ಹಮಿಕೊಳ್ಳಲಾಗಿದೆ. ಅದಕ್ಕಾಗಿ ನಾನು ಆಂಜನೇಯ ಸ್ವಾಮಿ ಪೂಜೆ ಸಲ್ಲಿಸಿದ್ದು ಪಾದಯಾತ್ರೆ ಮೂಲಕ ಮಹಾರಾಜ ಕಾಲೇಜಿಗೆ ತೆರಳಿ ಅಲ್ಲಿ ಸಮಾವೇಶ ನಡೆಸುತ್ತಿದ್ದೇ ವೆ ಎಂದು ಹೇಳಿದರು.
5
+ ಕಾಂಗ್ರೆಸ್‌‍ ಪಕ್ಷದಿಂದ ರಾಜ್ಯದ ಜನತೆಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಹಾಗಾಗಿ ಭ್ರಷ್ಟ ಸರ್ಕಾರವನ್ನು ಕಿತ್ತೋಗೆಯಲು ಈ ಪಾದಯಾತ್ರೆ ಹಮಿಕೊಂಡಿದ್ದೆವು, ಅದು ಯಶಸ್ವಿಯಾಗಿದೆ. ಸಮಾವೇಶ ನಡೆಸುವ ಮೂಲಕ ನಾಡಿನ ಜನತೆಗೆ ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟಾಚಾರ ಹಾಗೂ ಅವರು ನಡೆಸುತ್ತಿರುವ ದುರಾಡಳಿತ ಬಗ್ಗೆ ಮನವರಿಕೆ ಮಾಡಿಕೊಡುತ್ತಿದ್ದೇವೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ನಾಗೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
eesanje/url_46_4_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ನಾಳೆ ಪಿಎಸ್‌‍ಐ ನೇಮಕಾತಿ ಪರೀಕ್ಷೆ , ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ
2
+
3
+ ಬೆಂಗಳೂರು,ಅ.2– ಬಹುನಿರೀಕ್ಷಿತ ಪೊಲೀಸ್‌‍ ಸಬ್‌ಇನ್ಸ್ ಪೆಕ್ಟರ್‌ (402) ಹುದ್ದೆಗಳ (ಪಿಎಸ್‌‍ಐ ಪರೀಕ್ಷೆ) ನೇಮಕಾತಿಗೆ ನಾಳೆ ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿದ್ಧತೆಗಳನ್ನು ಮಾಡಿಕೊಂಡಿದೆ.
4
+ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ ಮತ್ತು ದಾವಣಗೆರೆ ನಗರಗಳ ಒಟ್ಟು 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ.
5
+ ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಹೀಗಾಗಿ ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಎಚ್ಚರಿಸಿದ್ದಾರೆ.
6
+ ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ವೆಬ್‌ ಕಾಸ್ಟಿಂಗ್‌ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಜಾಮರ್‌ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು, ಆಸುಪಾಸಿನಲ್ಲಿ ಬ್ಲೂಟೂತ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್‌ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿದೆ.
7
+ ಕಮಾಂಡ್‌ ಸೆಂಟರ್‌: ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್‌ ಸೆಂಟರ್‌ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ವಿವರಿಸಿದ್ದಾರೆ.
8
+ ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್‌ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್‌ ಕಾಸ್ಟಿಂಗ್‌ ಮಾಡಲಾಗುತ್ತದೆ. ಅಲ್ಲದೆ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್‌ ಲೈನ್‌ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ.
9
+ ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ಹೇಳಿದರು. ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ.
10
+ ಇಎನ್‌ಟಿ ವೈದ್ಯರ ನಿಯೋಜನೆ:ಹಿಂದೆಲ್ಲ ಪರೀಕ್ಷೆ ನಡೆದಾಗ ಕಿವಿಯೊಳಗೆ ಅತಿ ಸೂಕ್ಷ್ಮ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಇಟ್ಟುಕೊಂಡು ಬಂದು ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಬ್ಬ ಇಎನ್‌ಟಿ ವೈದ್ಯರನ್ನು ನಿಯೋಜಿಸಿದ್ದು, ಅವರು ಕೂಡ ನಿಗಾ ಇಡಲಿದ್ದಾರೆ.
11
+ ವಿಡಿಯೋ ಕಾನ್ಫರೆನ್ಸ್ : ಪರೀಕ್ಷೆ ನಡೆಯುವ ಆರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ ಬಿಗಿ ಕ್ರಮಗಳ ಬಗ್ಗೆ ವಿವರಿಸಲಾಗಿದೆ.
eesanje/url_46_4_11.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದ ಡಿಕೆಶಿ – ಪರಂ ಮಾತುಕತೆ
2
+
3
+ ಬೆಂಗಳೂರು,ಸೆ.30-ಗೃಹಸಚಿವ ಡಾ.ಜಿ.ಪರಮೇಶ್ವರ್‌ರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.ರಾಜಕೀಯ ಸೂಕ್ಷ್ಮ ಸನ್ನಿವೇಶದಲ್ಲಿ ಈ ಇಬ್ಬರೂ ನಾಯಕರ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.
4
+ ಖುದ್ದು ಡಿ.ಕೆ.ಶಿವಕುಮಾರ್‌ರವರೇ ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌ರವರು, ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದೆ. ತುಮಕೂರು, ಬೆಂಗಳೂರು, ಮಂಡ್ಯಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಶುರುವಾಗಿದೆ.
5
+ ಎತ್ತಿನಹೊಳೆಯಿಂದ ನೀರನ್ನು ಹೊರಗೆ ತೆಗೆಯಲಾಗಿದೆ. ಬಾಕಿ ಕಾಮಗಾರಿ ಮುಂದುವರೆಸಲು ಅರಣ್ಯ ಭೂಮಿ ಅಡ್ಡ ಬಂದಿದೆ. ಅದಕ್ಕೆ ಪರ್ಯಾಯ ಜಾಗ ನೀಡಲು ತುಮಕೂರು ಮತ್ತು ಹಾಸನದಲ್ಲಿ ಜಿಲ್ಲಾಡಳಿತಗಳು ಸ್ಥಳ ಗುರುತಿಸಿವೆ. ಮುಂದಿನ ವರ್ಷದೊಳಗೆ ತುಮಕೂರಿಗೆ ನೀರು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದರು.
6
+ ಹಿಂದಿನ ಬಿಜೆಪಿ ಸರ್ಕಾರ ಬೈರಗೊಂಡ್ಲು ಜಲಾಶಯದ ಯೋಜನೆಯನ್ನು ಬದಲಾವಣೆ ಮಾಡಿದೆ. ದೊಡ್ಡಬಳ್ಳಾಪುರ ಮತ್ತು ತುಮಕೂರು ಜಿಲ್ಲೆಯ ಕೊರಟಗೆರೆ ಗಡಿಭಾಗವಾಗಿರುವುದರಿಂದ ಪರಿಹಾರ ವಿಚಾರವಾಗಿ ತಗಾದೆಗಳಿವೆ.ಪರಮೇಶ್ವರ್‌ ಮತ್ತು ತಾವು ಎತ್ತಿನಹೊಳೆಯಿಂದ ಯೋಜನೆಯುದ್ದಕ್ಕೂ ದಸರಾ ಮುಗಿದ ಬಳಿಕ ವೈಮಾನಿಕ ಸಮೀಕ್ಷೆ ನಡೆಸುತ್ತೇವೆ. ನಾನು ಬೈರಗೊಂಡ್ಲು ಜಲಾಶಯದ ಸ್ಥಳವನ್ನು ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.
7
+ ಈ ನಡುವೆ ಸಂಪರ್ಕ ಕಾಲುವೆಗಳ ಬಗ್ಗೆ ಸಮಿತಿ ರಚಿಸಲಾಗಿದೆ. ತಮ ಸರ್ಕಾರ ಕುಡಿಯುವ ನೀರು ಪೂರೈಸುವ ಭರವಸೆಯನ್ನು ಈಡೇರಿಸಲು ಬದ್ಧತೆ ತೋರಿಸುತ್ತೇವೆ ಎಂದರು.
8
+ ಈ ವೇಳೆ ರಾಜಕೀಯ ಕುರಿತು ಚರ್ಚೆಯಾಗಿದೆಯೇ ಎಂಬ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಪತ್ರಕರ್ತರಿಗೆ ರಾಜಕೀಯ ಬಿಟ್ಟು ಬೇರೆ ಗೊತ್ತಿಲ್ಲವೇ?, ಜನ ನಮಗೆ ಅಧಿಕಾರ ನೀಡಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸುವತ್ತ ಮತ್ತು ಪ್ರಣಾಳಿಕೆಯಲ್ಲಿನ ಆಶ್ವಾಸನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆದ್ಯತೆ ನೀಡುತ್ತೇವೆ.
9
+ ಮುಂದಿನ ದಿನಗಳಲ್ಲಿ ಜನರಿಗೆ ನಾವು ಏನು ಮಾಡಿದ್ದೇವೆ ಎಂದು ಹೇಳಿಕೊಳ್ಳುವ ಅಗತ್ಯವಿದೆ. ಆದ್ದರಿಂದ ಅಭಿವೃದ್ಧಿ ವಿಚಾರವನ್ನು ಆಯ್ಕೆ ಮಾಡಿದ್ದೇವೆ. ರಾಜಕೀಯ ಕುರಿತು ಪ್ರತಿದಿನವೂ ಮಾತನಾಡುತ್ತಲೇ ಇರುತ್ತೇವೆ ಎಂದು ಹೇಳಿದರು.ಹಗಲು-ರಾತ್ರಿ ಸಮಯ ಓಡುತ್ತಿದೆ. ಅಭಿವೃದ್ಧಿಯ ಕುರಿತು ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದರು.
10
+ ನಾವಿಬ್ಬರೂ ಸಭೆ ನಡೆಸಿದ್ದು, ಅಧಿಕಾರಿಗಳಿಲ್ಲದೇ ಇರುವುದು ದೊಡ್ಡ ವಿಚಾರವಲ್ಲ. ಕಾಂಗ್ರೆಸ್‌‍ನಲ್ಲಿ 136 ಜನ ಶಾಸಕರ�� ಒಟ್ಟಾಗಿದ್ದೇವೆ. ಅಧಿಕಾರಕ್ಕಾಗಿ ಯಾವುದೇ ಸಂಧಾನವಿಲ್ಲ ಎಂದು ಹೇಳಿದರು.ನಾಯಕತ್ವ ಸದೃಢವಾಗಿದ್ದ ಮೇಲೆ ಅಧಿಕಾರಿಗಳ ಅಗತ್ಯವಿಲ್ಲ, ನಾವೇ ಚರ್ಚೆ ಮಾಡಬಹುದು. ಹೀಗಾಗಿ ಈ ಸಭೆಗೆ ಯಾವ ಅಧಿಕಾರಿಗಳನ್ನು ಕರೆದಿಲ್ಲ. ನಾವೇ ಆಲೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
11
+ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಮಾಹಿತಿ ಸೋರಿಕೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಉತ್ತಮ ಖಾತೆಯನ್ನು ನೀಡಿದ್ದಾರೆ. ಅನಗತ್ಯವಾದ ಚರ್ಚೆಗಳನ್ನು ಬಿಟ್ಟು ಲಕ್ಷ ಜನರಿಗೆ ಉದ್ಯೋಗ ನೀಡುವ ಯೋಜನೆಗಳನ್ನು ತರಲು ಪ್ರಯತ್ನ ಮಾಡಲಿ. ಹಾಸನ, ಮಂಡ್ಯ, ಬೆಂಗಳೂರು, ಬೀದರ್‌, ಗುಲ್ಬರ್ಗದಂತಹ ಜಿಲ್ಲೆಗಳಲ್ಲಿ ನೆನಪಿನಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಲಿ. ನಮ ಸರ್ಕಾರ ಕೂಡ ಸಹಕಾರ ನೀಡಲಿದೆ. ರಾಜಕಾರಣ ಇದ್ದಿದ್ದೇ ಎಂದು ಸಲಹೆ ನೀಡಿದರು.
12
+ ಎಡಿಜಿಪಿ ಚಂದ್ರಶೇಖರ್‌ ಅವರು ಎಚ್‌.ಡಿ.ಕುಮಾರಸ್ವಾಮಿಯವರ ಕುರಿತು ಬರೆದಿರುವ ಪತ್ರ ಕೆಪಿಸಿಸಿ ಕಚೇರಿಯಲ್ಲಿ ತಯಾರಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅದು ಅವರಿಬ್ಬರಿಗೂ ಸೇರಿದ ವಿಚಾರ. ತನಿಖೆ ಮಾಡುವವರು, ವರದಿ ನೀಡುವವರು ಚಂದ್ರಶೇಖರ್‌. ನಮಗೂ ಅದಕ್ಕೂ ಸಂಬಂಧವಿಲ್ಲ ಎಂದರು.
13
+ ರಾಜ್ಯಸರ್ಕಾರವನ್ನು ಪತನಗೊಳಿಸಲು 1,200 ಕೋಟಿ ರೂ. ಸಿದ್ಧವಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಇದನ್ನು ಕಾಂಗ್ರೆಸ್‌‍ ಗಂಭೀರವಾಗಿ ಪರಿಗಣಿಸಿದೆ. ಹೈಕಮಾಂಡ್‌ಗೂ ಈ ವಿಚಾರವನ್ನು ತಿಳಿಸಲಾಗಿದ್ದು, ಪಕ್ಷದ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇವೆ. ಕಾನೂನು ಪ್ರಕಾರ ಆದಾಯ ತೆರಿಗೆ ಅಧಿಕಾರಿಗಳು ತನಿಖೆ ಮಾಡಬೇಕಿದೆ ಎಂದು ಒತ್ತಾಯಿಸಿದರು.
eesanje/url_46_4_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಕಾನೂನು ಸಮರ ಕೈಬಿಟ್ಟು ತನಿಖೆ ಎದುರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ
2
+
3
+ ಬೆಂಗಳೂರು,ಸೆ.30– ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಯನ್ನು ನಿಷ್ಪಕ್ಷಪಾತ ಹಾಗೂ ನ್ಯಾಯಸಮತವಾಗಿ ಎದುರಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನಾತಕವಾಗಿ ಹೋರಾಟವನ್ನು ಕೈಬಿಟ್ಟಿದ್ದಾರೆ.ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಮುಖ್ಯ ಮಂತ್ರಿ ವಿರುದ್ಧ ವಿಚಾರಣೆ ಹಾಗೂ ಅಭಿಯೋಜನೆಗೆ ಪೂರ್ವಾ ನುಮತಿ ನೀಡಿದ್ದರು.
4
+ ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ನ್ಯಾ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರಾಜ್ಯಪಾಲರ ಪೂರ್ವಾನುಮತಿಯನ್ನು ಎತ್ತಿಹಿಡಿದಿತ್ತು. ಆದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 218 ರಡಿ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶವನ್ನು ಅಮಾನ್ಯಗೊಳಿಸಿ, ಭ್ರಷ್ಟಾಚಾರ ತಡೆ ಕಾಯಿದೆ 17 ಎ ಅಡಿ ತನಿಖೆಗೆ ಅವಕಾಶ ನೀಡಿತ್ತು.
5
+ ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡಿದ ಅನುಸಾರ ಈಗಾಗಲೇ ಎಫ್‌ಐಆರ್‌ ದಾಖಲಾಗಿದೆ.
6
+ ಹೈಕೋರ್ಟ್‌ ಆದೇಶದ ವೇಳೆ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಮೇಲನವಿ ಸಲ್ಲಿಸುವುದಾಗಿ ಹೇಳಲಾಗಿತ್ತು. ಆದರೆ ಕಾನೂನು ಹೋರಾಟವನ್ನು ಕೈಬಿಟ್ಟಿರುವ ಸಿದ್ದರಾಮಯ್ಯನವರು ಲೋಕಾಯುಕ್ತ ತನಿಖೆಯನ್ನು ಎದುರಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಯಾವುದೇ ಮೇಲನವಿಗಳನ್ನು ಸಲ್ಲಿಸುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
7
+ ಹೈಕೋರ್ಟ್‌ನ ತೀರ್ಪಿನಲ್ಲಿ ತಮಗೆ ಮೇಲುಗೈ ಆಗಿದೆ ಎಂದು ಪರಿಭಾವಿಸಿರುವ ಸಿದ್ದರಾಮಯ್ಯ ಭ್ರಷ್ಟಾಚಾರ ನಿಗ್ರಹ ತಡೆ ಕಾಯಿದೆಯಡಿ ತನಿಖೆಗೆ ಆದೇಶಿಸಿರುವುದು ಸಾಮಾನ್ಯ ಬೆಳವಣಿಗೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ತನಿಖೆಗೆ ನೀಡಿದ್ದ ಅನುಮತಿಯನ್ನು ಅಮಾನ್ಯಗೊಳಿಸುವುದು ನ್ಯಾಯಾಂಗದಿಂದ ದೊರೆತ ಗೆಲುವು ಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ ಎನ್ನಲಾಗಿದೆ.
8
+ ಈ ಹಿನ್ನೆಲೆಯಲ್ಲಿ ಮೇಲನವಿಗಳನ್ನು ಸಲ್ಲಿಸಿ ಕಾಲಾಹರಣ ಮಾಡುವ ಬದಲಾಗಿ ತನಿಖೆಯನ್ನು ಎದುರಿಸಿ ನಿರ್ದೋಷಿಯಾಗಿ ಹೊರಬರುವುದು ಉತ್ತಮ ಎಂಬ ನಿಲುವನ್ನು ಸಿದ್ದರಾಮಯ್ಯ ಹೊಂದಿರುವುದಾಗಿ ತಿಳಿದುಬಂದಿದೆ.
9
+ ಮುಡಾ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ, ಜಮೀನಿನ ಮೂಲ ಮಾಲೀಕರಿಲ್ಲದೆ ನ್ಯಾಯೋಚಿತವಾಗಿ ಮಲ್ಲಿಕಾರ್ಜುನ ಸ್ವಾಮಿ ಭೂಮಿ ಖರೀದಿ ಮಾಡಿದ್ದಾರೆ. ಕಾನೂನು ಮೂಲಕವೇ ತಮ ಪತ್ನಿಗೆ ದಾನಪತ್ರ ನೀಡಲಾಗಿದೆ. ಜಮೀನನ್ನು ಮುಡಾ ನಿಯಮಬಾಹಿರವಾಗಿ ನಿವೇಶನ ಮಾಡಿ ಹಂಚಿಕೆ ಮಾಡಿದೆ.
10
+ ಭೂಮಿ ಕಳೆದುಕೊಂಡಿದ್ದಕ್ಕೆ ಪರಿಹಾರವಾಗಿ ನಿವೇಶನ ಪಡೆಯಲಾಗಿದೆ. ಇದರಲ್ಲಿ ಯಾವುದೇ ಲೋಪವಾಗಿಲ್ಲ. ಜಮೀನಿನ ಪರಭಾರೆ ನಿಯಮಬಾಹಿರವಾಗಿದ್ದರೆ ಅದರ ��ಗ್ಗೆ ತನಿಖೆ ನಡೆಯಲಿ, ತಪ್ಪುಗಳಾಗಿದ್ದರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಗಳಾಗಲಿ ಎಂದು ಕಾನೂನು ಸಲಹೆಗಾರರ ತಂಡಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
11
+ ಲೋಕಾಯುಕ್ತರು ದಾಖಲಿಸಿರುವ ಎಫ್‌ಐಆರ್‌ಗೆ ತಡೆ ಪಡೆಯಲು ಸಿದ್ದರಾಮಯ್ಯ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಂತೆ ನಿಗದಿತ ಕಾಲಾವಧಿಯಲ್ಲಿ ತನಿಖೆ ನಡೆದು ವರದಿ ನೀಡುವ ಸಾಧ್ಯತೆಗಳಿವೆ.
12
+ ಸಿದ್ದರಾಮಯ್ಯ ಕಾನೂನು ಸಂಘರ್ಷವನ್ನು ಮುಂದುವರೆಸಲಿದ್ದಾರೆ. ತನಿಖೆಗೆ ತಡೆ ತರಬಹುದು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮೇಲನವಿ ಸಲ್ಲಿಸಬಹುದು ಎಂಬೆಲ್ಲಾ ವ್ಯಾಖ್ಯಾನ ಮಾಡಿದವರು ಬೆಸ್ತು ಬೀಳುವಂತಾಗಿದೆ.ಸಿದ್ದರಾಮಯ್ಯ ತನಿಖೆಗೆ ಮುಖಾಮುಖಿಯಾಗುವ ಮೂಲಕ ರಾಜಕೀಯ ಎದುರಾಳಿಗಳಿಗೆ ಮತ್ತೊಂದು ಪಟ್ಟು ಹಾಕಿದ್ದಾರೆ.
eesanje/url_46_4_2.txt ADDED
@@ -0,0 +1,7 @@
 
 
 
 
 
 
 
 
1
+ ನಾಳೆಯಿಂದ ರಾಜ್ಯದ ಎಲ್ಲಾ ಶಾಲಾಗಳಿಗೆ ದಸರಾ ರಜೆ
2
+
3
+ ಬೆಂಗಳೂರು,ಅ.2-ನಾಳೆಯಿಂದ ರಾಜ್ಯದ ಎಲ್ಲಾ ಶಾಲಾಗಳಿಗೆ ದಸರಾ ರಜೆ ಘೋಷಿಸಲಾಗಿದೆ. ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ ಅಕ್ಟೋಬರ್‌ 3ರಿಂದ ಅಕ್ಟೋಬರ್‌ 20ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದ್ದು, ಒಟ್ಟು 17 ದಿನ ವಿದ್ಯಾರ್ಥಿಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ.
4
+ 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್‌ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ. ಇನ್ನು ದಸರಾ ರಜೆ ಬಳಿಕ ಅಕ್ಟೋಬರ್‌ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್‌ 10 ತನಕ ಶಾಲೆ ನಡೆಯಲಿದೆ.
5
+ 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.ಇನ್ನು, ಕ್ರಿಸ್‌‍ ಮಸ್‌‍ ರಜೆ ಬೇಡಿಕೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ ವ್ಯಾಪ್ತಿಯ ಜಿಲ್ಲಾ ಉಪ ನಿರ್ದೇಶಕರು ಅವರಿಗೆ ಸಲ್ಲಿಸಿದಲ್ಲಿ ಈ ಬಗ್ಗೆ ಆಯಾ ಉಪನಿರ್ದೇಶಕರು ಪರಿಶೀಲಿಸಿ ನಿರ್ಧರಿಸಲು ಸೂಚನೆ ನೀಡಲಾಗಿದೆ.
6
+ ಡಿಸೆಂಬರ್‌ ತಿಂಗಳಿನಲ್ಲಿ ನೀಡುವ ಕ್ರಿಸ್‌‍ಮಸ್‌‍ ರಜಾ ಅವಧಿಯನ್ನು ಅಕ್ಟೋಬರ್‌ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಿಕೊಳ್ಳಲು ಕ್ರಮವಹಿಸಲು ಸೂಚನೆ ನೀಡಲಾಗಿದೆ.ಉಳಿದಂತೆ ನಿಗದಿತ ಶೈಕ್ಷಣಿಕ ಕರ್ತವ್ಯದ ಅವಧಿಗಳು ಕಡಿಮೆಯಾಗದಂತೆ ಅನಿರೀಕ್ಷಿತ ಕಾರಣಗಳಿಂದಾಗಿ ಶಾಲೆಗೆ ರಜೆ ಘೋಷಣೆಯಾದಲ್ಲಿ ಆ ಅವಧಿಯ ಶಾಲಾ ಕರ್ತವ್ಯದ ದಿನಗಳನ್ನು ಮುಂದಿನ ರಜಾ ದಿನಗಳಲ್ಲಿ ಪೂರ್ಣ ದಿನ ಶಾಲೆಗಳನ್ನ ನಡೆಸಿ ಶಾಲಾ ಕರ್ತವ್ಯದ ದಿನಗಳನ್ನ ಸರಿದೂಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.
7
+ ದಸರಾ ರಜೆ ಹಿನ್ನೆಲೆಯಲ್ಲಿ ಪಟ್ಟಣ ಪ್ರದೇಶದಲ್ಲಿ ಇರುವವರು ರಜೆ ಅವಧಿಯನ್ನು ಕಳೆಯಲು ಗ್ರಾಮಗಳಿಗೆ ತೆರಳಿ ಕಳೆಯುವ ಸಾಮಾನ್ಯ ಸಂಗತಿಯಾಗಿದೆ. ಆದರೆ ರಾಜ್ಯದಲ್ಲಿ ದಸರಾ ರಜೆಗಳ ಬಳಿಕ ಮತ್ತೆ ಶಿಕ್ಷಣ ಸಂಸ್ಥೆಗಳಿಗೆ ಡಿಸೆಂಬರ್‌ನಲ್ಲಿ ಕ್ರಿಸ್‌‍ಮಸ್‌‍ ರಜೆ ಇರಲಿದ್ದು, ಆ ಬಳಿಕ ಜನವರಿಯಲ್ಲಿ ಸಂಕ್ರಾಂತಿ ರಜೆಗಳಿ ಸಿಗಲಿದೆ. ಇಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಲಾಗಿದ್ದು, ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್‌ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.
eesanje/url_46_4_3.txt ADDED
@@ -0,0 +1,7 @@
 
 
 
 
 
 
 
 
1
+ ಸಿಎಂ ಸಿದ್ದರಾಮಯ್ಯನವರ ಹಳೆಯ ವಿಡಿಯೋ ವೈರಲ್ : ಬಿಜೆಪಿ ಟಾಂಗ್
2
+
3
+ ಬೆಂಗಳೂರು,ಅ.1-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಸಿಎಂ ಯಡಿಯೂರಪ್ಪ ಪ್ರಕರಣದಲ್ಲಿ ಆಡಿದ್ದ ಮಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ಲಾಗುತ್ತಿದ್ದು, ನಿಮ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ.2011ರಲ್ಲಿ ಪ್ರತಿಪಕ್ಷದ ನಾಯಕರಾಗಿದ್ದ ಯಡಿಯೂರಪ್ಪ ಅಂದು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ವಿರುದ್ಧ ಭೂ ಹಗರಣದ ಆರೋಪ ಕೇಳಿಬಂದಿತ್ತು.
4
+ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಯಡಿಯೂರಪ್ಪ ನಿವೇಶನಗಳನ್ನು ವಾಪಸ್‌‍ ಪಡೆಯುವುದಾಗಿ ಹೇಳಿದ್ದರು. ಆಗ ಸಿದ್ದರಾಮಯ್ಯನವರು ಹೇಳಿದ್ದ ಮಾತು ವೈರಲ್ಲಾಗಿದೆ.ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಚೇರಿಯಲ್ಲಿ ಬಿಡುಗಡೆ ಮಾಡಿ, ಸಿದ್ದರಾಮಯ್ಯ ನವರೇ ನೀವು ಯಾವಾಗ ರಾಜೀನಾಮೆ ಕೊಡುತ್ತೀರಿ ಎಂದು ವಿಡಿಯೋ ಮೂಲಕ ಟಾಂಗ್‌ ನೀಡಿದ್ದಾರೆ.
5
+ , , , 2011 @, , .@ @. " ' ?" …../PWRkfJ62hH
6
+ ಸಿದ್ದರಾಮಯ್ಯನವರು ಮಕ್ಕಳಿಗೆ ನೀಡಿದ್ದ ನಿವೇಶನವನ್ನು ಯಡಿಯೂರಪ್ಪ ವಾಪಸ್‌‍ ಕೊಡುವುದಾಗಿ ಹೇಳಿದ್ದಾರೆ. ಹಣವನ್ನು ಪಡೆದುಕೊಂಡಿದ್ದಾರೆ. ಅವರು ತಪ್ಪು ಮಾಡಿಲ್ಲ ಎಂದರೆ ನಿವೇಶನವನ್ನು ಏಕೆ ವಾಪಸ್‌‍ ಕೊಡಬೇಕಿತ್ತು. ಇದು ಕಾನೂನು ಬಾಹಿರವಲ್ಲವೇ? ತಪ್ಪು ಮಾಡಿದ್ದರಿಂದಲೇ ಸೈಟ್‌ ವಾಪಸ್‌‍ ಕೊಟ್ಟಿದ್ದಾರೆ ಎಂದರ್ಥವಲ್ಲವೇ ಎಂದು ಪ್ರಶ್ನಿಸಿದ್ದಾರೆ.
7
+ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಆಡಿರುವ ಮಾತು ವೈರಲ್‌ ಆಗಿ ನೀವು ನಿಮ ಮಾತಿಗೆ ಬದ್ಧರಾಗಿದ್ದರೆ ಮೊದಲು ಗೌರವಯುತವಾಗಿ ನಿಮ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.
eesanje/url_46_4_4.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಸಿದ್ದರಾಮಯ್ಯನವರಿಗೆ ರಾಜೀನಾಮೆ ಬಿಟ್ಟು ಬೇರೆ ದಾರಿ ಇಲ್ಲ : : ವಿಜಯೇಂದ್ರ ಭವಿಷ್ಯ
2
+ : :
3
+ ಬೆಂಗಳೂರು,ಅ.1– ಮುಡಾ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ ಈ ಬಾರಿ ಬಚಾವ್ ಆಗುವ ಯಾವುದೇ ಲಕ್ಷಣಗಳಿಲ್ಲ. ಬದಲಿಗೆ ಅವರು ಯಾವುದೇ ಕ್ಷಣದಲ್ಲೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
4
+ ಕಳೆದ ಬಾರಿ ಹೂಬ್ಲೆಟ್ ವಾಚ್ ಪ್ರಕರಣದಲ್ಲಿ ಎಸಿಬಿ ಮೂಲಕ ಕ್ಲೀನ್ಚಿಟ್ ತೆಗೆದುಕೊಂಡಿದ್ದರು. ಆದರೆ ಈ ಬಾರಿ ಮುಡಾ ಪ್ರಕರಣದಲ್ಲಿ ಅವರೇ ಮೊದಲ ಆರೋಪಿಯಾಗಿದ್ದು, ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಜಾರಿನಿರ್ದೇಶನಾಲಯ ಇಸಿಐಆರ್ ದಾಖಲಿಸಿದೆ. ಹೀಗಾಗಿ ಅವರು ರಾಜೀನಾಮೆ ನೀಡದೆ ಬೇರೆ ಗತ್ಯಾಂತರವಿಲ್ಲ ಎಂದು ಹೇಳಿದರು.
5
+ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಿದ್ದರಾಮಯ್ಯನವರು ಈ ಪ್ರಕರಣದಲ್ಲಿ ತಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಬಂಡನತ ತೋರದೆ ತಕ್ಷಣವೇ ರಾಜೀನಾಮೆ ನೀಡಬೇಕು. ಕಳೆದ ಬಾರಿ ನಾನು ಕೆಲವೇ ದಿನಗಳಲ್ಲಿ ರಾಜೀನಾಮೆ ಕೊಡುತ್ತಾರೆ ಎಂದಿದ್ದಾರೆ. ಪರಿಸ್ಥಿತಿ ಈಗ ಕೆಲವೇ ಸಮಯಕ್ಕೆ ಬಂದು ನಿಂತಿದೆ ಎಂದು ವ್ಯಂಗ್ಯವಾಡಿದರು.
6
+ ಕಳೆದ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಕೆಲವರ ಜೊತೆ ಮಾತುಕತೆ ನಡೆಸಿದ್ದಾರೆ. ಕೆಲವು ಸಚಿವರು ಇಡಿ ಮಧ್ಯಪ್ರವೇಶ ಮಾಡಿದ ಮೇಲೆ ಎನಫ್ ಇಸ್ ಎನಫ್ ಎಂದು ಭವಿಷ್ಯವನ್ನು ನುಡಿದಿದ್ದಾರೆ. ಇಷ್ಟಾದರೂ ರಾಜೀನಾಮೆ ನೀಡದಿರುವುದು ಅವರ ಬಂಡತನಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
7
+ ನೀವು ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದೀರಿ. 14 ನಿವೇಶನಗಳನ್ನು ವಾಪಸ್ ಕೊಟ್ಟರೆ ಪ್ರಕರಣ ಇತ್ಯರ್ಥವಾಗುವುದಿಲ್ಲ. ನಿಮ ಹಾಗೂ ಕುಟುಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅದರಲ್ಲೂ ಮೊದಲ ಆರೋಪಿ ನೀವು. ಯಾವ ನೈತಿಕತೆ ಇಟ್ಟುಕೊಂಡು ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತೀರಿ ಎಂದು ಪ್ರಶ್ನೆ ಮಾಡಿದರು.
8
+ ಕಾನೂನು ಬಾಹಿರವಾಗಿ ಸೈಟ್ಗಳನ್ನು ಪಡೆದುಕೊಂಡಿದ್ದರಿಂದ ವಿಧಿಯಿಲ್ಲದೆ ವಾಪಸ್ ಕೊಟ್ಟಿರಬಹುದು. ಆಗ ಮಾತ್ರಕ್ಕೆ ಪ್ರಕರಣ ಇತ್ಯರ್ಥವಾಗುವುದಿಲ್ಲ. ಆರೋಪಿ ಆರೋಪಿಯೇ ಎಂದು ಕಿಡಿಕಾರಿದರು.
9
+ ಹಿಂದೆ ವಾಲೀಕಿ ಪ್ರಕರಣದಲಲೂ ಏನೂ ನಡೆದಿಲ್ಲ ಎಂದು ತಿಪ್ಪೇ ಸವರುವ ಕೆಲಸ ಮಾಡಿದ್ದಿರಿ. ಕೊನೆಗೆ 82 ಕೋಟಿ ಅಕ್ರಮ ನಡೆದಿದೆ ಎಂದು ಸದನದಲ್ಲಿ ನೀವೇ ಒಪ್ಪಿಕೊಂಡಿದ್ದೀರಿ. ಈಗ ಮೂಡಾದಲ್ಲೂ ಅದೇ ರೀತಿ ಬಹುಕೋಟಿ ವಂಚನೆಯಾಗಿದೆ. ಅಧಿಕಾರದಲ್ಲಿ ನೀವು ಮುಂದುವರೆಯಲೇಬಾರದೆಂದು ಆಗ್ರಹ ಮಾಡಿದರು.
10
+ ಮುಡಾದಲ್ಲಿ ಪ್ರಮುಖವಾಗಿ ಎರಡು ಪ್ರಕರಣಗಳು ನಡೆದಿವೆ. ಪತ್ನಿ ಪಾರ್ವತಿ ಹೆಸರಿನಲ್ಲಿ 14 ನಿವೇಶನ ಪಡೆದಿರುವುದು ಒಂದು ಕಡೆ. ಮತ್ತೊಂದ��� ಕಡೆ ಸಿಎಂ ಅವರು ಅವರ ಹಿಂಬಾಲಕರಿಗೆ 5 ಸಾವಿರ ಕೋಟಿ ಬೆಲೆ ಬಾಳುವ ನಿವೇಶನಗಳನ್ನು ಹಂಚಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
11
+ ಪ್ರಾರಂಭದಲ್ಲಿ ನಾವು ಹೇಳಿದಾಗ ನಾನೇಕೆ ಕೊಡಬೇಕು ಎಂದು ದುರಹಂಕಾರದ ಮಾತುಗಳನ್ನು ಸಿದ್ದರಾಮಯ್ಯ ಮಾತನಾಡಿದರು. ಕಳಂಕ ರಹಿತ ಮುಖ್ಯಮಂತ್ರಿಗಳಿಗೆ ಕಳಂಕ ಅಟ್ಟಿಕೊಳ್ಳಬಾರದು ಎಂಬುದು ನಮ ಮನವಿ. ಎಷ್ಟೇ ಆದರೂ ನೀವು 40 ವರ್ಷಗಳಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದಂತೆ ಆಡಳಿತ ನಡೆಸಿದ್ದೇನೆ ಎಂದು ಹೇಳುತ್ತೀದ್ದೀರಿ ಎಂದು ಕುಹುಕ ವಾಡಿದರು.
12
+ ನಾವು ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ನಡೆಸಿದ ಪರಿಣಾಮ ಇಂದು ತನಿಖಾ ಹಂತಕ್ಕೆ ಬಂದಿದೆ. ಮುಂದಿನ ದಿನಗಳಲ್ಲೂ ನಮ ಸರ್ಕಾರದ ವಿರುದ್ದ ಹೋರಾಟ ಮುಂದುವರೆಯಲಿದೆ ಎಂದು ವಿಜಯೇಂದ್ರ ಎಚ್ಚರಿಸಿದರು.
eesanje/url_46_4_5.txt ADDED
@@ -0,0 +1,7 @@
 
 
 
 
 
 
 
 
1
+ ಮುಡಾ ಪ್ರಕರಣದಿಂದಾಗಿ ಸಿಎಂ ಪತ್ನಿ ತೀವ್ರವಾಗಿ ನೊಂದಿದ್ದಾರಂತೆ
2
+ '
3
+ ಬೆಂಗಳೂರು,ಅ.1-ಮುಡಾ ಪ್ರಕರಣದಿಂದಾಗಿ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ತೀವ್ರವಾಗಿ ನೊಂದಿದ್ದು, ದುರುದ್ದೇಶಪೂರಕವಾಗಿ ತೇಜೋವಧೆ ಮಾಡುವ ಪ್ರಯತ್ನಗಳಾಗುತ್ತಿವೆ ಎಂದು ಹೇಳಿಕೊಂಡಿದ್ದಾರೆ ಎಂದು ಕುಟುಂಬದ ಆಪ್ತಮೂಲಗಳು ತಿಳಿಸಿವೆ.
4
+ ರಾಜಕೀಯವಾಗಿ 40 ವರ್ಷಗಳಲ್ಲಿ ಎಂದಿಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಯಾರ ಮೇಲೂ ಪ್ರಭಾವ ಬೀರಲಿಲ್ಲ. ಎಷ್ಟೇ ತೆರೆಮರೆಯಲ್ಲಿದ್ದರೂ ಅನಗತ್ಯವಾಗಿ ತಮನ್ನು ಎಳೆದು ತರಲಾಗುತ್ತಿದೆ ಎಂದು ನೊಂದಿದ್ದಾರೆ ಎಂದು ಸಿದ್ದರಾಮಯ್ಯನವರ ಸಹೋದರ ಸಿದ್ದೇಗೌಡರ ಪುತ್ರ ಸಿದ್ದರಾಮು ಹೇಳಿದ್ದಾರೆ.
5
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮ ದೊಡ್ಡಮ ಪಾರ್ವತಿ ಅವರೊಂದಿಗೆ ಎರಡು-ಮೂರು ಬಾರಿ ಮಾತನಾಡಿದ್ದು, ಇತ್ತೀಚಿನ ಬೆಳವಣಿಗೆಗಳಿಂದ ಅವರು ತೀವ್ರವಾಗಿ ನೊಂದಿದ್ದಾರೆ. ತಮಗೆ ಅರಿಶಿನ ಕುಂಕುಮಕ್ಕೆ ನೀಡಲಾಗಿದ್ದ ಜಮೀನನ್ನು ನೆಪ ಮಾಡಿಕೊಂಡು ರಾಜಕೀಯವಾಗಿ ಸಿದ್ದರಾಮಯ್ಯನವರ ವರ್ಚಸ್ಸನ್ನು ಹಾಳು ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ ಎಂದು ತಿಳಿಸಿದರು.
6
+ ತಮ ದೊಡ್ಡಮ ಅವರು ಯಾವುದೇ ತಪ್ಪು ಮಾಡಿಲ್ಲ. ನಿವೇಶನವನ್ನು ವಾಪಸ್ ನೀಡುವ ಅಗತ್ಯವಿರಲಿಲ್ಲ. ಆದರೆ ಸಿದ್ದರಾಮಯ್ಯನವರಿಗೆ ರಾಜಕೀಯವಾಗಿ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈಗಾಗಲೇ ನಿವೇಶನವನ್ನು ವಾಪಸ್ ನೀಡಿದ್ದಾರೆ. ಇದಾದ ಬಳಿಕ ತನಿಖೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದರು.
7
+ ಈ ಹಿಂದೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೇ ನಿವೇಶನ ಕೊಟ್ಟಿದ್ದರು. ಅದೂ ಕೂಡ ಇವರ ಜಮೀನು ಇದ್ದಿದ್ದಕ್ಕಾಗಿಯೇ ನಿವೇಶನ ನೀಡಲಾಗಿದೆ. ಈಗ ಅದರಲ್ಲಿ ತಪ್ಪು ಹುಡುಕುತ್ತಿಲ್ಲ. ಜೆಡಿಎಸ್-ಬಿಜೆಪಿ ಎರಡೂ ಪಕ್ಷಗಳು ಸೇರಿ ಷಡ್ಯಂತ್ರ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
eesanje/url_46_4_6.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಇಷ್ಟೆಲ್ಲಾ ಕಸರತ್ತು ನಿಮಗೆ ಬೇಕಿತ್ತಾ..? : ಸಿಎಂ ವಿರುದ್ಧ ಎಚ್ಡಿಕೆ ವಾಗ್ದಾಳಿ
2
+
3
+ ನವದೆಹಲಿ,ಅ.1-ಮುಡಾದಿಂದ ಪಡೆಯಲಾಗಿದ್ದ ನಿವೇಶನಗಳನ್ನು ಏಕಾಏಕಿ ಹಿಂದಿರುಗಿಸಲು ಹೇಳಿಕೊಟ್ಟವರು ಯಾರು?, ಇಷ್ಟೆಲ್ಲಾ ಸರ್ಕಸ್ ಏಕೆ ಬೇಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.
4
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಪತ್ನಿ ರಾತ್ರಿ ಏಕಾಏಕಿ ಮುಡಾಗೆ ಪತ್ರ ಬರೆದು ನಿವೇಶನ ಬೇಡ ಎಂದು ಹೇಳಿದ್ದಾರೆ. ಮನೆಯ ಚಿನ್ನ, ಒಡವೆ ಯಾವುದರ ಮೇಲೂ ಮಮತೆ ಇಲ್ಲ ಎಂದು ಹೇಳಿದ್ದಾರೆ. ಇದು ಸಿಎಂ ಗಮನಕ್ಕೆ ಬಾರದೇ ನಿವೇಶನವನ್ನು ವಾಪಸ್ ನೀಡುವುದಾಗಿ ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು.
5
+ ಕಪ್ಪುಚುಕ್ಕೆ ಇಲ್ಲದಂತೆ ರಾಜಕೀಯ ಮಾಡಿರುವುದಾಗಿ ಹೇಳಿಕೊಂಡಿದ್ದರು. ನನ್ನನ್ನು ಸುಳ್ಳುಗಾರ ಅಂತಾರೆ. ಇವರ ಮಾತು ಕೇಳಿಸಿಕೊಂಡರೆ ಸುಳ್ಳು ಎಲ್ಲಿ ಹುಟ್ಟಿದೆ ಎಂಬುದು ಗೊತ್ತಾಗುತ್ತದೆ. ನನ್ನನ್ನು ಹಿಟ್ ಅಂಡ್ ರನ್ ಎನ್ನುತ್ತಾರೆ. ಇವರೇನು ಯೂಟರ್ನೇ? , ಕಳ್ಳತನ ಮಾಡಿದ ಮೇಲೆ ತಪ್ಪಾಯಿತು ಎಂದರೆ ಬಿಡಲು ಸಾಧ್ಯವೇ? ಎಂದು ತರಾಟೆಗೆ ತೆಗೆದುಕೊಂಡರು.
6
+ ಮುಡಾ ನಿವೇಶನಗಳನ್ನು ಪಡೆದಿರುವುದಷ್ಟೇ ಅಲ್ಲ, ಈ ಹಿಂದೆ ಏನೆಲ್ಲಾ ಮಾಡಿದ್ದಾರೆ. ವೈಟ್ನರ್ ಹಾಕಿದ್ದು ಮುಗಿದ್ಹೋಯ್ತು. ಈಗ ಇಲ್ಲಿಗೆ ಬಂದಿದ್ದಾರೆ ಎಂದ ಅವರು, ಸಿದ್ದರಾಮಯ್ಯ ಅವರು ಚುನಾವಣಾ ಸಾಲ ತೀರಿಸಲು ಒಂದು ಕೋಟಿ ರೂ.ಗೆ ಮಾರಾಟ ಮಾಡಿದ್ದ ನಿವೇಶನ ಎಲ್ಲಿಂದ ಬಂದಿತು.
7
+ ಬಡವರ ಮಕ್ಕಳಿಗೆ ವಸತಿ ಶಾಲೆ ನಿರ್ಮಾಣ ಮಾಡಲು ಭೂಮಿ ಡಿ ನೋಟಿಫಿಕೇಷನ್ ಮಾಡಿಸಿಕೊಂಡು ಅದನ್ನು ಸಿದ್ದರಾಮಯ್ಯ ಪಡೆದಿದ್ದಾರೆ. ಇದು 14 ನಿವೇಶನಗಳಿಗಿಂತ ದೊಡ್ಡ ಪ್ರಕರಣ ಎಂದು ಆರೋಪಿಸಿದರು.ಊರಿಗೇ ಬುದ್ಧಿ ಹೇಳುವವರು ಇಲ್ಲಿ ಏನು ಮಾಡಿದ್ದೀರಿ, ಸತ್ಯ ಹೇಳಿ, ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನೂ ಎರಡು ಪ್ರಕರಣಗಳಿವೆ ಎಂದು ದೂರಿದರು.
8
+ ಸಚಿವ ಕೃಷ್ಣಭೈರೇಗೌಡರು ಮೇಧಾವಿಯಲ್ಲವೇ?, ಇದನ್ನೂ ಪರಿಶೀಲನೆ ಮಾಡಲಿ. ನಾನು ಇಂತಹ ಕೆಲಸ ಮಾಡಿಲ್ಲ. ತಾನೊಂದು ಬಗೆದರೆ, ದೈವ ಮತ್ತೊಂದು ಬಗೆಯುವುದು ಎನ್ನುವಂತಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ನಮನ್ನು ಮುಗಿಸುವ ಹುನ್ನಾರ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಏನೋ ಹೇಳಿದ್ದಾರೆ ಎಂದ ಅವರು ಭ್ರಷ್ಟರ ದಾಖಲೆ ಬಿಡುಗಡೆ ಮಾಡುವ ಕಾಲ ಬರುತ್ತದೆ ಎಂದರು.
9
+ ತನಿಖೆಗೆ ಜಾಮೀನು ಪಡೆದಿಲ್ಲ :ನಾನು ಜಾಮೀನು ಪಡೆದಿರುವುದು ತನಿಖೆ ಮಾಡದಂತೆ ಅಲ್ಲ. ಈ ಸರ್ಕಾರದ ಕೆಟ್ಟ ಅಧಿಕಾರಿಗಳಿಂದ ಏನು ಬೇಕಾದರೂ ಮಾಡುತ್ತಾರೆ. ಜಾಮೀನು ತೆಗೆದುಕೊಳ್ಳಿ ಎಂದು ನಮ ವಕೀಲರು ಹೇಳಿದ್ದರಿಂದ ಜಾಮೀನು ತೆಗೆದುಕೊಂಡಿದ್ದೇನೆಯೇ ಹೊರತು ತನಿಖೆ ಮಾಡದಂತೆ ಜಾಮೀನು ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
10
+ ಐಪಿಎಸ್ ಅಧಿಕಾರಿ ವಿರುದ್ಧ ನಾನು ಮಾತನಾಡಿದಾಗ ಅವರು ಎಲ್ಲಿ, ಯಾರ ಛೇಂಬರ್ನಲ್ಲಿ ಕುಳಿತು ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ಒಂದು ದಿನವಾದರೂ ಕುಮಾರಸ್ವಾಮಿಯವರನ್ನು ಜೈಲಿಗೆ ಹಾಕಬೇಕೆಂಬ ಚರ್ಚೆ ಮಾಡಿದ್ದಾರೆ ಎಂದು ಹೇಳಿದರು.
11
+ 80 ಕೋಟಿ ರೂ. ಗುಳುಂ ಮಾಡಿರುವ ಆರೋಪ ಪ್ರಕರಣದಲ್ಲಿ ಏನಾಯಿತು?, ಯಾರನ್ನು ಎಸ್ಐಟಿ ಬಂಧಿಸಿತ್ತು? ಎಂಬುದು ಗೊತ್ತಿಲ್ಲವೇ?, ನಾನು ಯಾವ ಅಧಿಕಾರಿಯನ್ನೂ ದುರ್ಬಳಕೆ ಮಾಡಿಕೊಂಡಿಲ್ಲ. ನಾನು ಅಧಿಕಾರಿಗೆ ಪ್ರಶ್ನೆ ಮಾಡಿದ್ದೂ ಕೂಡ ನನ್ನ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡಲು ಅವಕಾಶ ಕೇಳಿ ಪತ್ರ ಬರೆದಿದ್ದು, ಅದನ್ನು ಸೋರಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದೇನೆ. ಅಧಿಕಾರಿಯ ಉದ್ಧಟತನದ ಬಗ್ಗೆ ಪ್ರಶ್ನೆ ಮಾಡಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
12
+ ಬೆಂಗಳೂರಿನ ಭೂ ಮಾಫಿಯಾ ಕಾನೂನು ಬಾಹಿರ ಚಟುವಟಿಕೆ ಮಾಡುವವರಿಗೆ ಸಾಥ್ ನೀಡಲು ಐಪಿಎಸ್ ಸ್ಥಾನವನ್ನು ಆ ಅಧಿಕಾರಿಗೆ ಕೊಟ್ಟಿದ್ದೀರ. ಆ ಅಧಿಕಾರಿ ಕ್ರಿಮಿನಲ್ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದು, ಅವರು ಜಾಮೀನು ಪಡೆದುಕೊಂಡಿದ್ದಾರೆ ಎಂದರು.
13
+ ಮುಖ್ಯಮಂತ್ರಿ ಬಳಿ ಬಂದು ಕ್ರಿಮಿನಲ್ ಮುಖ್ಯಮಂತ್ರಿ ಎಂದು ಅಧಿಕಾರಿಗಳು ಹೇಳಿದರೆ ಏನು ಮಾಡುತ್ತೀರ?, ಶನಿವಾರ ಕಚೇರಿ ರಜೆ ಇದ್ದರೂ ಲೆಟರ್ಹೆಡ್ ಇಲ್ಲದೇ, ಸೀಲ್ ಇಲ್ಲದೇ, ಸಂಖ್ಯೆ ಇಲ್ಲದ ಪತ್ರ ಹೊರಗೆ ಬಂದಿದೆ. ಆ ಅಧಿಕಾರಿ ಹೈಕೋರ್ಟ್ನಲ್ಲಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ. ನಾನು ಕೇವಲ ಜಾಮೀನು ಪಡೆದಿದ್ದೇನೆಯೇ ಹೊರತು ಅವರಂತೆ ತನಿಖೆಗೆ ತಡೆಯಾಜ್ಞೆ ಕೇಳಿಲ್ಲ ಎಂದು ವಾಗ್ದಾಳಿ ನಡೆಸಿದರು.
14
+ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಶಬ್ದ ಪಂಡಿತರಾಗಿದ್ದು, ನನ್ನ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿಲ್ಲ ಎಂದು ಹೇಳಿದ್ದಾರೆ. ಆದರೆ ಆ ಪತ್ರ ಹೇಗೆ ಹಂಚಲಾಯಿತು?, ನನ್ನ ವಿರುದ್ಧ ಮುಖ್ಯಮಂತ್ರಿ ಕಚೇರಿಯಿಂದ ನಿನ್ನೆ ರಾತ್ರಿ ಮತ್ತೊಂದು ಪತ್ರ ಹೋಗಿದೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ಕುಮಾರ್ ಅವರನ್ನು ಎಲ್ಲಿಗೆ ಕರೆಸಿಕೊಂಡರು. ಹೆದರಿಸಿ ಹಣ ಪಡೆಯುವ ಚರ್ಚೆ ನಡೆದಿದೆಯಲ್ಲವೇ? ಎಂದು ಆರೋಪಿಸಿದರು.
eesanje/url_46_4_7.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲು
2
+ : 18
3
+ ಬೆಂಗಳೂರು,ಅ.1-ಮುಡಾ ಪ್ರಕರಣದಲ್ಲಿ ಮತ್ತಷ್ಟು ಆಳಕ್ಕಿಳಿದಿರುವ ಜಾರಿ ನಿರ್ದೇಶನಾಲಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ. ವಿಶೇಷ ಎಂದರೆ ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂ ಮಾಲೀಕ ದೇವರಾಜ್ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಇಎಂಎಲ್ಎ)ಯಡಿ ದೂರು ದಾಖಲಿಸಿತ್ತು.
4
+ ಇದೀಗ ಇ.ಡಿ ಅ„ಕಾರಿಗಳು ಮುಡಾದಲ್ಲಿ ಕಾರ್ಯ ನಿರ್ವಹಿಸಿದ್ದ 18 ಅ„ಕಾರಿಗಳ ವಿರುದ್ಧ ಇಂಫೋರ್ಸ್ನಮೆಂಟ್ ಕೇಸ್ ಇನ್ಫರ್ಮೇಷನ್ ರಿಪೊರ್ಟ್ ದೂರು ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.
5
+ ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪವಿದೆ. ಇದಕ್ಕೆ ಸಂಬಂ„ಸಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.
6
+ ಈಗಾಗಲೇ ಪ್ರಕರಣಕ್ಕೆ ಸಂಬಂ„ಸಿದಂತೆ ಸೆ.9ರಂದು ಈ ಎಲ್ಲಾ 18 ಅ„ಕಾರಿಗಳಿಗೆ ಲೋಕಾಯುಕ್ತ ಪೊಲೀಸರ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು.14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂ„ಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.
7
+ ಇಡಿ ತನಿಖೆ ಮಾಡಬೇಕಿದ್ದರೆ ಮೊದಲಿಗೆ ಯಾವುದಾದರೂ ಒಂದು ತನಿಖಾ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿರಬೇಕು. ಈಗ ಮೈಸೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಆಧಾರದಲ್ಲಿ ಇಡಿ ತನಿಖೆ ನಡೆಸಬಹುದಾಗಿದೆ. ಮೈಸೂರಿನಲ್ಲಿ ಬೇನಾಮಿ ಆಸ್ತಿ ಗಳಿಕೆ, ಭ್ರಷ್ಟಾಚಾರನಡೆದಿದೆ ಎಂಬ ಆರೋಪದಡಿ ತನಿಖೆ ನಡೆಸುವ ಸಾಧ್ಯತೆ ಇದೆ.
8
+ ಎರಡನೇ ಅಂಶವೆಂದರೆ, ಮುಡಾದಲ್ಲಿದ್ದ 387 ಕೋಟಿ ಹಣ ಬೇರೆ ಕ್ಷೇತ್ರಗಳ ಅಭಿವೃದ್ಧಿಗೆ ಬಳಕೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಾಗಿದೆ. ಈಗಾಗಲೇ ಇಡಿ ಇಸಿಐಆರ್ ದಾಖಲಿಸಿದೆ. ವರುಣಾ, ಶ್ರೀರಂಗಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಪ್ರಭಾವ ಬಳಸಿ ಬಳಕೆ ಮಾಡಿದ ಆರೋಪ ಇದೆ. ಕಾನೂನು ಬಾಹಿರವಾಗಿ ಮುಡಾ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪ ಇದ್ದು, ಇದರ ಬಗ್ಗೆಯೂ ತನಿಖೆ ಮಾಡುವ ಸಾಧ್ಯತೆ ಇದೆ.
9
+ 2023ರ ಅಕ್ಟೋಬರ್ನಲ್ಲಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಐಟಿ ದಾಳಿಯಾಗಿತ್ತು. ಆಗ ಉದ್ಯಮಿ ಹಾಗೂ ಗುತ್ತಿಗೆದಾರರ ಮನೆಗಳಲ್ಲಿ 40 ಕೋಟಿ ರೂಪಾಯಿಗೂ ಅಧಿಕ ಹಣ ಸಿ���್ಕಿತ್ತು. ಅದು ಸಚಿವರೊಬ್ಬರಿಗೆ ಸೇರಿದ್ದು ಎನ್ನಲಾಗಿತ್ತು. ಮುಡಾಗೆ ಸಂಬಂಧಿಸಿದ ಹಣ ಎಂಬ ಗುಮಾನಿಯೂ ಇತ್ತು. ಇದಕ್ಕೆ ಸಂಬಂಧಿಸಿದಂತೆ ಇಡಿ ಅ„ಕಾರಿಗಳು ತನಿಖೆ ಮಾಡಬಹುದು.
10
+ ದಾಳಿ ಸಾಧ್ಯತೆ: ಮೂಲಗಳ ಪ್ರಕಾರ ಇ.ಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಪ್ರಭಾವಿ ಸಚಿವರೊಬ್ಬರ ಮೇಲೆ ದಾಳಿ ನಡೆಸಲು ಸಜ್ಜಾಗಿದೆ ಎಂದು ಗೊತ್ತಾಗಿದೆ. ಸಿಎಂ ಅವರಿಗೆ ಅತ್ಯಂತ ನಿಕಟ ವ್ಯಕ್ತಿಯಾಗಿರುವ ಈ ಸಚಿವರು ಪ್ರಬಲ ಇಲಾಖೆಯ ಮುಖ್ಯಸ್ಥರಾಗಿದ್ದು, ಮುಡಾ ಪ್ರಕರಣದ ಪ್ರಮುಖ ದಾಖಲೆಗಳು ಇವರ ಬಳಿ ಇರಬಹುದೆಂಬ ಶಂಕೆ ಇ.ಡಿಗಿದೆ. ಹೀಗಾಗಿ ಪ್ರಭಾವಿ ಸಚಿವರ ನಿವಾಸ, ಕಚೇರಿ, ಸಂಬಂಧಿಕರು ಸೇರಿದಂತೆ ಮತ್ತಿತರ ಮೇಲೆ ಯಾವುದೇ ದಾಳಿ ನಡೆಯುವ ಸಂಭವವಿದೆ.
11
+ ಈ ಹಿಂದೆ ಮುಡಾ ಪ್ರಕರಣ ಆಚೆ ಬರುತ್ತಿದ್ದಂತೆ ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆಂಬ ಆರೋಪ ಕೇಳಿಬಂದಿತ್ತು.ಇವೆಲ್ಲವನ್ನೂ ಗಮನಿಸಿಯೇ ಇ.ಡಿ ಸಿಎಂ ಆಪ್ತ ಸಚಿವರನ್ನು ಭೇಟಿಯಾಗಲು ಸಜ್ಜಾಗಿದೆ. ಹೀಗಾಗಿಯೇ ಗೋವಾ ಮತ್ತು ಚೆನ್ನೈನಿಂದ ಒಂದು ತಂಡ ಈಗಾಗಲೇ ಬೆಂಗಳೂರಿಗೆ ಆಗಮಿಸಿ, ಸಚಿವರ ನಿವಾಸ, ಕಚೇರಿ, ಫ್ಲ್ಯಾಟ್, ಸಂಬಂಧಿಕರ ಮನೆಗಳ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆ ಹಾಕಿದ್ದಾರೆ.
12
+ ಇನ್ನೊಂದೆಡೆ ಮೈಸೂರಿನಲ್ಲಿ ಈ ಹಿಂದೆ ಮುಡಾ ಅಧ್ಯಕ್ಷರಾಗಿದ್ದವರು, ಮುಡಾ ಆಯುಕ್ತರು, ಜನಪ್ರತಿನಿ„ಗಳು ಸೇರಿದಂತೆ ಮತ್ತಿತರರಿಗೂ ದಾಳಿಯ ಬಿಸಿ ತಟ್ಟುವ ಸಂಭವವಿದೆ.ಕೆಲವರು ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ನಿವೇಶನ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಇ.ಡಿ ಇನ್ನಷ್ಟು ಆಳಕ್ಕೆ ಇಳಿದು ತನಿಖೆ ನಡೆಸಲು ಮುಂದಾಗಿದೆ.
13
+ ಬರುವ ದಿನಗಳಲ್ಲಿ ಸಿದ್ದರಾಮಯ್ಯ ಅವರ ಆಪ್ತರಿಗೆ ಇ.ಡಿ ಗಾಳ ಹಾಕಲು ತೆರೆಮರೆಯಲ್ಲಿ ಕಾರ್ಯಾಚರಣೆಗೆ ಇಳಿದಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.