2941af49faca966887302a6a799a859aa76714c1176ab52f5279b8f889874afe
Browse files- eesanje/url_46_141_8.txt +5 -0
- eesanje/url_46_141_9.txt +7 -0
- eesanje/url_46_142_1.txt +5 -0
- eesanje/url_46_142_10.txt +11 -0
- eesanje/url_46_142_11.txt +11 -0
- eesanje/url_46_142_12.txt +6 -0
- eesanje/url_46_142_2.txt +6 -0
- eesanje/url_46_142_3.txt +5 -0
- eesanje/url_46_142_4.txt +3 -0
- eesanje/url_46_142_5.txt +10 -0
- eesanje/url_46_142_6.txt +8 -0
- eesanje/url_46_142_7.txt +11 -0
- eesanje/url_46_142_8.txt +7 -0
- eesanje/url_46_142_9.txt +6 -0
- eesanje/url_46_143_1.txt +11 -0
- eesanje/url_46_143_10.txt +4 -0
- eesanje/url_46_143_11.txt +4 -0
- eesanje/url_46_143_12.txt +5 -0
- eesanje/url_46_143_2.txt +7 -0
- eesanje/url_46_143_3.txt +5 -0
- eesanje/url_46_143_4.txt +5 -0
- eesanje/url_46_143_5.txt +19 -0
- eesanje/url_46_143_6.txt +10 -0
- eesanje/url_46_143_7.txt +3 -0
- eesanje/url_46_143_8.txt +11 -0
- eesanje/url_46_143_9.txt +4 -0
- eesanje/url_46_144_1.txt +5 -0
- eesanje/url_46_144_10.txt +8 -0
- eesanje/url_46_144_11.txt +6 -0
- eesanje/url_46_144_12.txt +6 -0
- eesanje/url_46_144_2.txt +8 -0
- eesanje/url_46_144_3.txt +7 -0
- eesanje/url_46_144_4.txt +12 -0
- eesanje/url_46_144_5.txt +6 -0
- eesanje/url_46_144_6.txt +6 -0
- eesanje/url_46_144_7.txt +9 -0
- eesanje/url_46_144_8.txt +5 -0
- eesanje/url_46_144_9.txt +8 -0
- eesanje/url_46_145_1.txt +7 -0
- eesanje/url_46_145_10.txt +10 -0
- eesanje/url_46_145_11.txt +8 -0
- eesanje/url_46_145_12.txt +10 -0
- eesanje/url_46_145_2.txt +8 -0
- eesanje/url_46_145_3.txt +4 -0
- eesanje/url_46_145_4.txt +7 -0
- eesanje/url_46_145_5.txt +5 -0
- eesanje/url_46_145_6.txt +5 -0
- eesanje/url_46_145_7.txt +7 -0
- eesanje/url_46_145_8.txt +6 -0
- eesanje/url_46_145_9.txt +5 -0
eesanje/url_46_141_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
92ನೇ ಹುಟ್ಟಹಬ್ಬದ ಅಂಗವಾಗಿ ದೇವೇಗೌಡರ ಪೋಸ್ಟರ್ಗೆ ಕ್ಷೀರಾಭಿಷೇಕ
|
2 |
+
ಬೆಂಗಳೂರು,ಮೇ18-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 92ನೇ ಹುಟ್ಟಹಬ್ಬದ ಅಂಗವಾಗಿ ಜೆಡಿಎಸ್ ಕಚೇರಿ ಜೆಪಿ ಭವನದ ಆವರಣದಲ್ಲಿ ಗೌಡರ ಪೋಸ್ಟರ್ಗೆ ಕ್ಷೀರಾಭಿಷೇಕ ಮಾಡಲಾಯಿತು. ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರ ನೇತೃತ್ವದಲ್ಲಿ ದೇವೇಗೌಡರ ಕಟೌಟ್ಗೆ ಅಭಿಷೇಕ ಮಾಡಿ ಶುಭ ಕೋರಲಾಯಿತು.
|
3 |
+
ಇದಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ಕೇಕ್ ಕತ್ತರಿಸಿ ಹುಟ್ಟಹಬ್ಬ ಆಚರಿಸಿ ಪರಸ್ಪರ ಸಿಹಿ ಹಂಚಿ ಗೌಡರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶರವಣ, ದೇವೇಗೌಡರ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿದ್ದೇವೆ.
|
4 |
+
ದೇವೇಗೌಡರು ಬೇಸರದಲ್ಲಿರುವುದು ನಮಗೂ ಬೇಸರ ತಂದಿದೆ. ಕಳಂಕ ತರುವ ಪ್ರಯತ್ನ ಕೆಲವರಿಂದ ನಡೆಯುತ್ತಿದ್ದು, ಅವರಿಗೇ ತಿರುಗು ಬಾಣವಾಗಲಿದೆ. ಸತ್ಯಕ್ಕೆ ಜಯ ಸಿಗುತ್ತದೆ. ಈ ನೆಲದ ಕಾನೂನು ಮೇಲೆ ವಿಶ್ವಾಸವಿದೆ. ಭಗವಂತನ ಆಶೀರ್ವಾದದಿಂದ ಎಲ್ಲವನ್ನೂ ಎದುರಿಸುವ ಶಕ್ತಿ ಇದೆ ಎಂದು ಅವರು ಹೇಳಿದರು.
|
5 |
+
ರಮೇಶ್ಗೌಡ ಮಾತನಾಡಿ, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ತಲಾ ಒಂದೊಂದು ಕೇಕ್ಗಳನ್ನು ತಂದು ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಿದ್ದೇವೆ. ಅಲ್ಲದೆ ದೇವೇಗೌಡರ ಜನದಿನದ ಅಂಗವಾಗಿ ಆಸ್ಪತ್ರೆಗಳಲ್ಲಿ ಹಣ್ಣುಗಳನ್ನು ಹಂಚಿದ್ದೇವೆ ಎಂದರು.ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ರೇವಣ್ಣ, ಗೋಪಾಲ್, ಶೈಲಜಾ, ಕನ್ಯಾಕುಮಾರಿ ಮತ್ತಿತರರು ಉಪಸ್ಥಿತರಿದ್ದರು.
|
eesanje/url_46_141_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವರಾಜೇಗೌಡ ‘100 ಕೋಟಿ ಆಫರ್’ ಆರೋಪ
|
2 |
+
ಬೆಂಗಳೂರು,ಮೇ18– ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮಾಡಿರುವ 100 ಕೋಟಿ ಆಫರ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ ನಾಯಕರೂ ವಿಚಲಿರಾಗಿದ್ದಾರೆ. ದೇವರಾಜೇಗೌಡ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತ್ರವಲ್ಲದೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹೆಸರನ್ನೂ ಉಲ್ಲೇಖ ಮಾಡಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ.
|
3 |
+
ಪ್ರಜ್ವಲ್ ಅವರ ಕಾರು ಚಾಲಕ ಕಾರ್ತಿಕ್ ಗೌಡನ ಹತ್ತಿರ ಪೆನ್ಡ್ರೈವ್ ತರಿಸಿಕೊಂಡು ಎಲ್ಲಾ ರೆಡಿ ಮಾಡಿದ ಡಿ.ಕೆ ಶಿವಕುಮಾರ್ ನಾಲ್ಕು ಸಚಿವರ ಕಮಿಟಿ ಮಾಡಿ ಇದನ್ನೆಲ್ಲಾ ಹ್ಯಾಂಡಲ್ ಮಾಡಬೇಕು ಎಂದು ಬಿಟ್ಟಿದ್ದಾರೆ ಎಂದು ದೇವರಾಜೇಗೌಡ ಆರೋಪ ಮಾಡಿದ್ದರು.
|
4 |
+
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಮಾಡಿದ್ದಾರೆ. ಚನ್ನರಾಯಪಟ್ಟಣದ ಗೋಪಾಲಸ್ವಾಮಿ ಬಳಿ 5 ಕೋಟಿ ಹಣ ಕೊಟ್ಟು ಸಂಧಾನಕ್ಕೆ ಕಳಿಸಿದ್ದರು. ಈ ಸಂದರ್ಭದಲ್ಲಿ ಶಿವಕುಮಾರ್ ಅವರು 100 ಕೋಟಿ ಆಫರ್ ಮಾಡಿದರು ಎಂದು ದೇವರಾಜೇಗೌಡ ಆರೋಪಿಸಿದ್ದಾರೆ.
|
5 |
+
ಆರಂಭದಲ್ಲೇ ಡಿ.ಕೆ.ಶಿವಕುಮಾರ್, ಚೆಲುವರಾಯಸ್ವಾಮಿ, ಕೃಷ್ಣ ಬೈರೇಗೌಡ ಅವರು ಈ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡುತ್ತಾ ಬಂದಿದ್ದರು. ಇದಕ್ಕೆ ಪ್ರಿಯಾಂಕ್ ಖರ್ಗೆ ಕೂಡ ಧ್ವನಿಗೂಡಿಸಿದ್ದರು. ಆದರೆ ಇದೀಗ ದೇವರಾಜೇಗೌಡ ಈ ನಾಲ್ವರನ್ನು ಉಲ್ಲೇಖಿಸಿ ಆರೋಪಿಸಿರುವುದು ಸಹಜವಾಗಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
|
6 |
+
ದೇವರಾಜೇಗೌಡ ಈ ಹಿಂದೆಯೂ ಡಿ.ಕೆ. ಶಿವಕುಮಾರ್ ಗೆ ಸಂಬಂಧಿಸಿದ ಆಡಿಯೋ ಬಿಡುಗಡೆ ಮಾಡಿದ್ದರು. ಎಲ್.ಆರ್.ಶಿವರಾಮೇಗೌಡ ಜೊತೆಗೆ ನಡೆಸಿದ ಮಾತುಕತೆ ಹಾಗೂ ಇದೇ ಸಂದರ್ಭದಲ್ಲಿ ಡಿಕೆಶಿ ಜೊತೆಗೂ ನಡೆಸಿದ ಮಾತುಕತೆಯ ಆಡಿಯೋ ಬಿಡುಗಡೆ ಮಾಡಿದ್ದರು. ಆದರೆ ಇದರ ಪೂರ್ತಿ ವಿವರವನ್ನು ಅವರು ಬಹಿರಂಗಪಡಿಸಿರಲಿಲ್ಲ.
|
7 |
+
ಈ ಆಡಿಯೋ ಬಿಡುಗಡೆಯ ಬೆನ್ನಲ್ಲೇ ದೇವರಾಜೇಗೌಡ ಅವರನ್ನು ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದೆ. ಇದೀಗ ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ನಡುವೆ ಅವರು ರಾಜ್ಯದ ನಾಲ್ವರು ಸಚಿವರ ವಿರುದ್ಧ ಗಂಭೀರ ಸ್ವರೂಪದ ಆರೋಪವನ್ನು ಮಾಡಿದ್ದಾರೆ.ಇನ್ನು ಬಿಜೆಪಿ ಈ ಆರೋಪವನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.
|
eesanje/url_46_142_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
92ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು
|
2 |
+
ಬೆಂಗಳೂರು,ಮೇ 18– ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು 91 ವರ್ಷವನ್ನು ಪೂರೈಸಿದ್ದು, 92 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇಂದು ಬೆಳಿಗ್ಗೆ ದೇವೇಗೌಡರು ತಮ ಹುಟ್ಟುಹಬ್ಬದ ನಿಮಿತ್ತ ಜೆ.ಪಿ.ನಗರದ ತಿರುಮಲಗಿರಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
|
3 |
+
ಈ ಸಂದರ್ಭದಲ್ಲಿ ದೇವೇಗೌಡರ ಪುತ್ರ ಬಾಲಕೃಷ್ಣೇಗೌಡ ಗೌಡರ ಜೊತೆಗಿದ್ದರು. ಕಾರಣಾಂತರಗಳಿಂದ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಜೆಡಿಎಸ್ನ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಾವಿದ್ದಲ್ಲಿಯೇ ಹಾರೈಸಬೇಕು ಎಂದು ಗೌಡರು ಕೋರಿದ್ದರು. ಅಲ್ಲದೆ, ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಬದ್ಧತೆಯಿಂದ ಪಕ್ಷ ಸಂಘಟನೆಯ ಕರ್ತವ್ಯ ನಿರ್ವಹಿಸಬೇಕು ಎಂದು ಕೋರಿದ್ದರು.
|
4 |
+
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರ ಹಾಗೂ ರಾಜ್ಯದ ಹಲವು ಗಣ್ಯರು ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ದೇವೇಗೌಡರು ರಾಷ್ಟ್ರಕ್ಕೆ ಸಲ್ಲಿಸಿರುವ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿಯವರು ಕೃಷಿ, ಗ್ರಾಮೀಣಾಭಿವೃದ್ಧಿ ಕುರಿತಂತೆ ಗೌಡರು ಹೊಂದಿರುವ ಒಲವು ಗಮನಾರ್ಹವಾಗಿದೆ. ಅವರಿಗೆ ದೀರ್ಘವಾದ ಆಯಸ್ಸು, ಆರೋಗ್ಯ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
|
5 |
+
ಬೆಂಗಳೂರು ಮಹಾನಗರ ಜೆಡಿಎಸ್ ಪಕ್ಷದ ವತಿಯಿಂದ ಜೆ.ಪಿ.ಭವನದಲ್ಲಿಂದು ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪಕ್ಷದ ಹಲವು ಮುಖಂಡರು ಪಾಲ್ಗೊಂಡು ಗೌಡರಿಗೆ ಶುಭ ಕೋರಿದರು.ಅದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬದ ಕಾರ್ಯಕ್ರಮಗಳನ್ನು ಹಮಿಕೊಂಡಿದ್ದರು.
|
eesanje/url_46_142_10.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಮತದಾನ ಮುಗಿದ ಬೆನ್ನಲ್ಲೇ ಸರ್ಕಾರ ಆಕ್ಟಿವ್, ಅಧಿಕಾರಿಗಳ ಜೊತೆ ಸಿಎಂ-ಡಿಸಿಎಂ ಮೀಟಿಂಗ್
|
2 |
+
ಬೆಂಗಳೂರು,ಮೇ 17-ಕರ್ನಾಟಕದ ಎಲ್ಲಾ ಕ್ಷೇತ್ರಗಳಿಗೂ ಲೋಕಸಭಾ ಚುನಾವಣೆ ಪೂರ್ಣಗೊಂಡಿದ್ದರೂ ನೀತಿ ಸಂಹಿತೆ ವಿನಾಯಿತಿಗೊಳ್ಳದ ಕಾರಣ ಆಡಳಿತ ವ್ಯವಸ್ಥೆ ಮೇಲೆ ಭಾರೀ ಪರಿಣಾಮ ಬೀರಿದ್ದು, ಜಿಡ್ಡುಗಟ್ಟಿದ ವ್ಯವಸ್ಥೆಯನ್ನು ಚುರುಕುಗೊಳಿಸುವ ಸಲುವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ವಿವರಣೆ ನೀಡಿದರು.
|
3 |
+
ವಿಧಾನಸೌಧದ ಸಮೇಳನ ಸಭಾಂಗಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
|
4 |
+
ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಘೋಯಲ್, ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ನಿರ್ದೇಶಕರು ಹಾಜರಿದ್ದು, ಬಜೆಟ್ ಯೋಜನೆಗಳ ಪ್ರಗತಿಯ ಕುರಿತು ಮಾಹಿತಿ ನೀಡಿದ್ದಾರೆ.ಪಂಚಖಾತ್ರಿ ಯೋಜನೆಗಳು ಚಾಲ್ತಿಯಲ್ಲಿವೆ. ಅದೇ ರೀತಿ ರಾಜ್ಯಸರ್ಕಾರ ಯೋಜನಾ ವೆಚ್ಚಕ್ಕೆ 55 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.
|
5 |
+
ಚುನಾವಣಾ ನೀತಿ ಸಂಹಿತೆಯ ಕಾರಣಕ್ಕಾಗಿ ಬಹಳಷ್ಟು ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಅಧಿಕಾರಿಗಳು ಪ್ರತಿಯೊಂದಕ್ಕೂ ನೀತಿ ಸಂಹಿತೆಯ ನೆಪ ಹೇಳುತ್ತಿದ್ದು, ಆಡಳಿತ ವ್ಯವಸ್ಥೆ ದಿಕ್ಕು ತಪ್ಪಿದಂತಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಇಂದಿನ ಸಭೆಯಲ್ಲಿ ಮುಖ್ಯಮಂತ್ರಿಯವರಿಗೆ ವಿವರಣೆ ನೀಡುವ ಮೂಲಕ ಯೋಜನೆಗಳ ಪ್ರಗತಿ ಬಗ್ಗೆ ಚರ್ಚೆ ನಡೆಸಿದರು.
|
6 |
+
ಬರ ನಿರ್ವಹಣೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಆರ್ಥಿಕ ನೆರವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದ್ದು, ಮೇವು ಲಭ್ಯತೆ, ಗೋ ಶಾಲೆಗಳ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಸಮಾಲೋಚನೆ ನಡೆಸಿದರು.
|
7 |
+
ನೀತಿ ಸಂಹಿತೆಯ ನೆಪದಲ್ಲಿ ಆಡಳಿತ ಯಂತ್ರ ತಟಸ್ಥವಾಗುವುದು ಸಹನೀಯವಲ್ಲ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸಕಾಲಿಕವಾಗಿ ಸ್ಪಂದಿಸಬೇಕು. ಈಗಾಗಲೇ ಚುನಾವಣೆ ಮುಗಿದಿರುವುದರಿಂದ ಚುನಾವಣಾ ಕರ್ತವ್ಯ ನಿಯೋಜನೆ ಎಂದು ಕಾರಿಗೆ ಬೋರ್ಡ್ ಹಾಕಿಕೊಂಡು ತಿರುಗಾಡಿ ಕಾಲಾಹರಣ ಮಾಡುವುದು ಸರಿಯಲ್ಲ. ಸಚಿವರು, ಶಾಸಕರು ಪ್ರಶ್ನಿಸುವುದಿಲ್ಲ ಎಂಬ ಕಾರಣಕ್ಕಾಗಿ ಮನಸೋ ಇಚ್ಛೆ ನಡೆದುಕೊಳ್ಳುವುದನ್ನು ಗಮನಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.
|
8 |
+
ಕರ್ನಾಟಕದ ಮೇಲೆ ಕೆಂಗಣ್ಣು :ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲ��� ಮಾ.16 ರಿಂದ ಜೂ.4 ರವರೆಗೂ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಸರಿಸುಮಾರು 80 ದಿನಗಳ ಕಾಲದ ಈ ಪ್ರಕ್ರಿಯೆಯಲ್ಲಿ ಅಧಿಕಾರಿಗಳದೇ ದರ್ಬಾರ್ ಎಂಬಂತಾಗಿದೆ. ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಆಯಾ ರಾಜ್ಯಗಳಲ್ಲಿರುವ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿರುವ ಕಡೆ ನೀತಿ ಸಂಹಿತೆಯನ್ನು ಭಾಗಶಃ ಸಡಿಲಗೊಳಿಸಿದೆ.
|
9 |
+
ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸ್ಗಡ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ್, ಸಿಕ್ಕಿಂ, ತಮಿಳುನಾಡು, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದೆ.
|
10 |
+
ಹೀಗಾಗಿ ಅಲ್ಲಿ ಭಾಗಶಃ ನೀತಿ ಸಂಹಿತೆ ಸಡಿಲಗೊಂಡಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಲೋಕಸಭಾ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದೆ. ಆಡಳಿತಾತಕ ದೃಷ್ಟಿಯಿಂದ ಹಾಗೂ ಬರ ನಿರ್ವಹಣೆ ಕಾರಣಕ್ಕೆ ನೀತಿ ಸಂಹಿತೆಯನ್ನು ಸಡಿಲಿಕೆ ಮಾಡುವಂತೆ ಹಲವು ಸಚಿವರು ಪತ್ರ ಬರೆದಿದ್ದಾರೆ. ಆದರೆ ಅದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.ಹೀಗಾಗಿ ರಾಜ್ಯದಲ್ಲಿ ಜನಪ್ರತಿನಿಧಿಗಳು ಆಡಳಿತ ವ್ಯವಸ್ಥೆಯಿಂದ ವಿಮುಖರಾಗಿ ನಿಲ್ಲುವಂತಹ ಪರಿಸ್ಥಿತಿ ಬಂದಿದೆ.
|
11 |
+
ಬಿಸಿತುಪ್ಪವಾದ ಸಿದ್ದರಾಮಯ್ಯ :ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಸಿ ತುಪ್ಪವಾಗಿದ್ದಾರೆ.ಇಲ್ಲಿ ಜಾರಿಗೊಳ್ಳುವ ಜನಪರ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ವ್ಯಾಪಕ ಚರ್ಚೆಗಳಾಗುತ್ತಿವೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳೂ ಕೂಡ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದು, ವಿಚಾರ ಮಂಥನಕ್ಕೆ ಗ್ರಾಸವಾಗಿವೆ.ಈ ಹಿನ್ನೆಲೆಯಲ್ಲಿ ಕರ್ನಾಟಕದ ಮೇಲೆ ಅನಾಪೇಕ್ಷಣೆಯಾದಂತಹ ಒತ್ತಡಗಳು ಹೆಚ್ಚುತ್ತಲೇ ಇದೆ ಎಂಬ ಆಕ್ಷೇಪಗಳಿವೆ.
|
eesanje/url_46_142_11.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಜ್ವಲ್ ರೇವಣ್ಣನನ್ನು ಕರೆತಂದು ಬಂಧಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ : ಪರಮೇಶ್ವರ್
|
2 |
+
ಬೆಂಗಳೂರು,ಮೇ 17-ಪೆನ್ಡ್ರೈವ್ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶದಿಂದ ಕರೆತಂದು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತಾದಳ, ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ, ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಹೇಳುವುದಿಲ್ಲ, ನಮಗೆ ಇದರ ಅರಿವಿದೆ. ಆದರೆ ನಮಗೂ ಜವಾಬ್ದಾರಿಯಿದೆ. ನಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ ಎಂದರು.
|
4 |
+
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಕರೆತಂದು ಬಂಧಿಸಿ ಕಾನೂನು ಕ್ರಮ ಜರುಗಿಸುವವರೆಗೂ ಪ್ರಕ್ರಿಯೆಗಳು ಚಾಲನೆಯಲ್ಲಿರುತ್ತವೆ. ಅದು ಯಾವ ಕಾರಣಕ್ಕೂ ನಿಧಾನವಾಗುವುದಿಲ್ಲ. ಇಂತಹ ಪ್ರಕರಣವನ್ನು ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದರು.
|
5 |
+
ಎಸ್ಐಟಿಯ ತನಿಖಾ ವರದಿ ಗೃಹಸಚಿವರಿಗಿಂತಲೂ ಮೊದಲೇ ಮಂಡ್ಯದ ಸಂಸದರಿಗೆ ತಲುಪುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕುಮಾರಸ್ವಾಮಿಯವರಿಗೆ ಆಡಳಿತ ವ್ಯವಸ್ಥೆಯ ಅರಿವಿರುತ್ತದೆ.
|
6 |
+
ಮಂಡ್ಯ ಶಾಸಕರಿಗೆ ಯಾವ ಅಧಿಕಾರಿ ಬ್ರೀಫಿಂಗ್ ಮಾಡುತ್ತಾರೋ? ಗೊತ್ತಿಲ್ಲ. ಸಾಮಾನ್ಯವಾಗಿ ಮುಖ್ಯಮಂತ್ರಿಯವರಿಗೆ ಹಾಗೂ ಗೃಹಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡುತ್ತಿರುತ್ತಾರೆ. ಕುಮಾರಸ್ವಾಮಿ ಹಾಗೂ ಬಿಜೆಪಿಯ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ನಾವು ಯಾವುದೇ ಮುಲಾಜಿಗೂ ಒಳಗಾಗದೇ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ. ತನಿಖೆ ಪ್ರಗತಿಯಲ್ಲಿರುವುದರಿಂದ ಎಲ್ಲಾ ವಿಚಾರವನ್ನು ಬಹಿರಂಗಪಡಿಸುವುದೂ ಕೂಡ ಸೂಕ್ತವಲ್ಲ ಎಂದು ಹೇಳಿದರು.
|
7 |
+
ಆರೋಪಿ ಬಂಧನ :ಹುಬ್ಬಳ್ಳಿಯ ಅಂಜಲಿ ಪ್ರಕರಣದಲ್ಲಿ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಇಂತಹ ಕೊಲೆ ಪ್ರಕರಣಗಳಲ್ಲಿ ಯಾವುದೇ ಮುಲಾಜು ನೀಡುವುದಿಲ್ಲ. ಆರೋಪಿಗಳಿಗೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.
|
8 |
+
ಅಂಜಲಿ ಕುಟುಂಬದ ಸದಸ್ಯರು ಆರೋಪಿಯಿಂದ ಆತಂಕ ಇರುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮೌಖಿಕ ಮಾಹಿತಿ ನೀಡಿದ್ದರು. ಲಿಖಿತ ದೂರು ನೀಡಿರಲಿಲ್ಲ ಎಂಬ ವರದಿ ಇದೆ. ಒಂದು ವೇಳೆ ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದರೂ ಪೊಲೀಸರು ಕ್ರಮ ಕೈಗೊಳ್ಳದೇ ಇದ್ದರೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಮೇಲ್ನೋಟಕ್ಕೆ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಸೇರಿದಂತೆ ಕೆಲವರನ್ನು ಅಮಾನತುಗೊಳಿಸಲಾಗಿದೆ. ಮುಂದಿನ ಹಂತದಲ್ಲಿ ಅಗತ್ಯ ಶಿಸ್ತು ಕ್ರಮವನ್ನೂ ಜರುಗಿಸಲಾಗುವುದು ಎಂದು ತಿಳಿಸಿದರು.
|
9 |
+
ಹುಬ್ಬಳ್ಳಿಯಲ್ಲಿ ಪದೇಪದೇ ಈ ರೀತಿಯ ಪ್ರಕರಣಗಳು ಘಟಿಸುತ್ತಿರುವುದಕ್ಕೆ ಕಾರಣವೇನು ಎಂಬುದನ್ನು ಕಂಡುಹಿಡಿಯಲು ಪ್ರಗತಿ ಪರಿಶೀಲನೆ ನಡೆಸಲಾಗುವುದು. ಎಡಿಜಿಪಿ ಅವರನ್ನು ಈಗಾಗಲೇ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಅವರು ನನಗೆ ವರದಿ ನೀಡಿದ್ದಾರೆ. ಕಾರಣವನ್ನು ಕಂಡುಹಿಡಿಯಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದ. ಸಾಧ್ಯವಾದರೆ ತಾವೂ ಕೂಡ ಹುಬ್ಬಳ್ಳಿಗೆ ಭೇಟಿ ನೀಡುವುದಾಗಿ ಹೇಳಿದರು.
|
10 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಮಳೆಯಾಗಿದೆ. ಆದರೆ ಬರದ ಪರಿಣಾಮ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ ಎಂದರು.
|
11 |
+
ತಮ ಕೊರಟಗೆರೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರಾಗಿದ್ದವರು ನನ್ನ ಜೊತೆ ಫೋಟೊ ತೆಗೆಸಿಕೊಂಡು ಅದನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹಲವರಿಂದ ಹಣ ವಸೂಲಿ ಮಾಡಿ ವಂಚನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಯಾವುದೇ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುವಂತೆ ತಾವು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
|
eesanje/url_46_142_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಅತ್ಯಾಚಾರ ಪ್ರಕರಣ : ಬಿಜೆಪಿ ಮುಖಂಡ ದೇವರಾಜೇಗೌಡಗೆ ನ್ಯಾಯಾಂಗ ಬಂಧನ
|
2 |
+
ಬೆಂಗಳೂರು,ಮೇ17-ಮಹಿಳೆಯ ಮೇಲೆ ಅತ್ಯಾಚಾರ ಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಪಟ್ಟಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೂರು ದಿನಗಳಿಂದ ಪೊಲೀಸ್ ವಶದಲ್ಲಿದ್ದ ಅವರನ್ನು ಹಾಸನ ಪೊಲೀಸರು ಇಂದು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದೇವರಾಜೇಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು.
|
3 |
+
ಪ್ರಕರಣದ ಹಿನ್ನೆಲೆ:ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಹಾಸನ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬರು ತಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.
|
4 |
+
ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವೀಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ವೀಡಿಯೋ ಕಾಲ್ ಮಾಡಿ ಪ್ರಚೋದನೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದರು.
|
5 |
+
ಪ್ರಜ್ವಲ್ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡರು, ಹಾಸನದಿಂದ ಜೆಡಿಎಸ್ ಸಂಸದರಿಗೆ ಲೋಕಸಭೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು.
|
6 |
+
2023ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ, ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಸ್ಪರ್ಧಿಸಿದ್ದ ದೇವರಾಜೇಗೌಡ, ಲೈಂಗಿಕ ಕಿರುಕುಳದ ವೀಡಿಯೊಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ರಾಜ್ಯ ಕಾಂಗ್ರೆಸ್ ನಾಯಕರನ್ನು ದೂರಿದ್ದರು.ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲೂ ದೇವರಾಜೇಗೌಡ ಭಾರೀ ಸದ್ದು ಮಾಡಿದ್ದರು.
|
eesanje/url_46_142_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಗೃಹಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿದ್ದ ಝಬೇರ್ನನ್ನ ಉಚ್ಚಾಟಿಸಿದ ಕಾಂಗ್ರೆಸ್
|
2 |
+
ಕೊರಟಗೆರೆ, ಮೇ 18-ಗೃಹ ಸಚಿವ ಡಾ.ಜಿ. ಪರಮೇಶ್ವರ ಹೆಸರನ್ನು ದುರ್ಬಳಿಕೆ ಮಾಡಿಕೊಂಡು ಅಮಾಯಕರಿಗೆ ವಂಚನೆ ಮಾಡಿರುವ ಮಹಮದ್ ಝಬೇರ್ ರನ್ನು ಸಚಿವರ ಆದೇಶದಂತೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿ ಪದವಿಯನ್ನು ವಜಾಗೊಳಿಸಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್ ತಿಳಿಸಿದರು.
|
3 |
+
ಪಟ್ಟಣದ ರಾಜೀವ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರಟಗೆರೆ ಪಟ್ಟಣದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮದ್ ಝಬೇರ್ ಬೆಂಗಳೂರು ಸೇರಿದಂತೆ ಹಲವು ಕಡೆ ಗೃಹ ಸಚಿವರ ಹೆಸರನ್ನು ದುರ್ಬಳಕೆ ಮಾಡಿಕೊಂಡು, ಅವರ ಜೊತೆಯಲ್ಲಿ ಹಿಂದೆ ಅವರು ಶಾಸಕರಾಗಿದ್ದ ಕಾಲದಲ್ಲಿ ತೆಗೆಸಿಕೊಂಡಿದ್ದ ಪೋಟೋವನ್ನು ತೋರಿಸಿ ವಂಚಿಸಿರುವುದಾಗಿ ತಿಳಿದುಬಂದಿದೆ.
|
4 |
+
ಇಂತಹ ವಂಚಕರನ್ನು ಗೃಹ ಸಚಿವರು ಎಂದೂ ಕ್ಷಮಿಸುವುದಿಲ್ಲಾ. ಆರೋಪಿ ಝಬೇರ್ ರಾಜ್ಯಪಾಲರ ಲೆಟರ್, ಅಧಿಕಾರಿಗಳ ಸಹಿ ಮತ್ತು ಹೆಸರುಗಳನ್ನು ಸಹ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ಗೊತ್ತಾಗಿದ್ದು ಆದ್ದರಿಂದ ಈ ಕೂಡಲೆ ಅವನನ್ನು ಪಕ್ಷದಿಂದ ವಜಾಗೊಳಿಸಿ ಉಚ್ಚಾಟಿಸಲಾಗಿದೆ ಎಂದರು.
|
5 |
+
ತಾಲೂಕು ಅಲ್ಪಸಂಖ್ಯಾತ ಮುಖಂಡ ಮಹಮದ್ ಮಕ್ತಿಯಾರ್ ಮಾತನಾಡಿ ಝಬೇರ್ನ ಮಾಡಿರುವ ವಂಚನೆ ಅಪರಾಧಗಳನ್ನು ನಮ್ಮ ಧರ್ಮದವರು ಸೇರಿದಂತೆ ಪಕ್ಷದವರು ಸಹಿಸುವುದಿಲ್ಲ ಎಂದರು. ಮಹಿಳಾ ಘಟಕದ ಅಧ್ಯಕ್ಷೆ ಜಯಮ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಅರಕೆರೆ ಶಂಕರ್ ಮಾತನಾಡಿದರು.
|
6 |
+
ಗೋಷ್ಠಿಯಲ್ಲಿ ಪ.ಪಂ.ಸದಸ್ಯರಾದ ಎ.ಡಿ. ಬಲರಾಮಯ್ಯ, ಕೆ.ಆರ್.ಓಬಳರಾಜು, ನಾಗರಾಜು, ನಂದೀಶ್, ಪಕ್ಷದ ಮುಖಂಡರಾದ ಮಹಾಲಿಂಗಪ್ಪ, ಗಣೇಶ್, ನಾಜೀರ್ ಅಹಮದ್, ಕವಿತಾ, ಲಕ್ಷೀದೇವಮ, ಸುಮಾ, ನಾಸೀರ್, ಇಸಾಯಿಲ್, ಇರ್ಷಾದ್, ಜಮೀರ್, ಮುರಳಿ, ಯುವಕಾಂಗ್ರೆಸ್ನ ವಿನಯ್ಕುಮಾರ್, ಅರವಿಂದ್, ದೀಪಕ್, ರಘುವೀರ್, ಎರ್ಟೆಲ್ ಗೋಪಿ ಸೇರಿದಂತೆ ಇನ್ನಿತರರು ಹಾಜರಿದ್ದರು.
|
eesanje/url_46_142_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಟ್ರ್ಯಾಕ್ಟರ್-ಖಾಸಗಿ ಬಸ್ ನಡುವೆ ಭೀಕರ ಅಪಘಾತ, ನಾಲ್ವರ ಸಾವು
|
2 |
+
ಕೊಪ್ಪಳ,ಮೇ 18-ಟ್ರ್ಯಾಕ್ಟರ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
|
3 |
+
ಕೊಪ್ಪಳ ಜಿಲ್ಲೆ ಯಲಬುರ್ಗ ತಾಲೂಕಿನ ಕರಮುಡಿ ಗ್ರಾಮದ ಬಸವರಾಜು (22), ತೇಜಸ್ (22), ದುರುಗಮ (65) ಹಾಗೂ ಗದಗ ಜಿಲ್ಲೆಯ ತಿಮಾಪುರ ಗ್ರಾಮದ ಕೊಂಡಪ್ಪ (60) ಮೃತಪಟ್ಟ ದುರ್ದೈವಿಗಳು. ಶಿವಪ್ಪ ಎಂಬುವರು ಹರಕೆ ತೀರಿಸುವ ಸಲುವಾಗಿ 30 ಮಂದಿ ಸಂಬಂಧಿಕರನ್ನು ಕರೆದುಕೊಂಡು ಕೊಪ್ಪಳ ತಾಲೂಕಿನ ಹುಲಿಗೆಮದೇವಿ ದೇವಸ್ಥಾನಕ್ಕೆ ಟ್ರ್ಯಾಕ್ಟರ್ನಲ್ಲಿ ನಿನ್ನೆ ಬಂದು ಹರಕೆ ತೀರಿಸಿ ರಾತ್ರಿ ವಾಪಸ್ಸಾಗುತ್ತಿದ್ದರು.
|
4 |
+
ಈ ಸಂದರ್ಭದಲ್ಲಿ ಹೊಸಲಿಂಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಹಿಂದಿನಿಂದ ಅತೀ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ಸು ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
|
5 |
+
ಸುದ್ದಿ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತವೆಸಗಿದ ಬಸ್ ಚಾಲಕ ಪರಾರಿಯಾಗಿದ್ದು, ಆತನ ಶೋಧ ಕಾರ್ಯ ಮುಂದುವರೆದಿದೆ.
|
eesanje/url_46_142_4.txt
ADDED
@@ -0,0 +1,3 @@
|
|
|
|
|
|
|
|
|
1 |
+
ರಾಜ್ಯದ ಹಾದಿಬೀದಿಯಲ್ಲಿ ಕೊಲೆ, ಗೃಹ ಇಲಾಖೆ ನಿದ್ದೆ ಮಾಡುತ್ತಿದೆಯೇ?: ಜೆಡಿಎಸ್ ವಾಗ್ದಾಳಿ
|
2 |
+
ಬೆಂಗಳೂರು,ಮೇ 18-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ ಎಂದು ಜೆಡಿಎಸ್ ಆರೋಪಿಸಿದೆ.ಈ ಸಂಬಂಧ ಎಕ್ಸ್ ನಲ್ಲಿ ಪತ್ರಿಕೆಯೊಂದರಲ್ಲಿ ಕೊಲೆ, ಅತ್ಯಾಚಾರಗಳಿವೆ ಸಂಬಂಧಿಸಿದಂತೆ ವರದಿಯಾಗಿರುವುದನ್ನು ಪೋಸ್ಟ್ ಮಾಡಿರುವ ಜೆಡಿಎಸ್, ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯೇ? ಅಥವಾ ನಿದ್ದೆ ಮಾಡುತ್ತಿದೆಯೇ? ದಯಮಾಡಿ ಹೇಳುವಿರಾ? ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಅವರನ್ನು ಪ್ರಶ್ನಿಸಿದೆ.
|
3 |
+
ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿ ಇದೆ. ಕೇವಲ ನಾಲ್ಕು ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ. ಜನರಿಗೆ ನೆಮ್ಮದಿಯ ಗ್ಯಾರಂಟಿ ಇಲ್ಲ ಎಂದು ವಾಗ್ದಾಳಿ ನಡೆಸಿದೆ.
|
eesanje/url_46_142_5.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿಧಾನಪರಿಷತ್ ಚುನಾವಣೆ : ಮತದಾರರಿಗೆ ಆಮಿಷ.. ?!
|
2 |
+
ಬೆಂಗಳೂರು,ಮೇ17-ಲೋಕಸಭಾ ಚುನಾವಣೆ-2024ರ ಫಲಿತಾಂಶಕ್ಕೆ ಒಂದು ದಿನದ ಮೊದಲು ಅಂದರೆ ಜೂನ್ 3ರಂದೇ ವಿಧಾನಪರಿಷತ್ನ ಆರು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ತಲಾ ಮೂರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಗೆಲುವಿಗೆ ಪರಿಷತ್ತು ಚುನಾವಣೆಯಲ್ಲಿ ಒಂದು ವರ್ಗದ ಅಭ್ಯರ್ಥಿಗಳು ಅನೈತಿಕ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
|
3 |
+
ಇತ್ತೀಚೆಗಷ್ಟೇ ಮುಗಿದ ಲೋಕಸಭೆ ಚುನಾವಣೆ ವೇಳೆ ಮತದಾರರನ್ನು ಓಲೈಸಲು ಹಲವು ಕಡೆಗಳಲ್ಲಿ ಉಡುಗೊರೆ ಮತ್ತು ನಗದಿನ ಆಮಿಷಗಳನ್ನು ಮತದಾರರಿಗೆ ಒಡ್ಡಲಾಗಿದೆ ಎಂದು ಹೇಳಲಾಗುತ್ತಿದೆ.
|
4 |
+
ಈ ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಕೂಡ ಕೆಲವು ಅಭ್ಯರ್ಥಿಗಳ ವಿರುದ್ಧ ಇದೇ ರೀತಿಯ ತಂತ್ರವನ್ನು ಅಳವಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಕೌನ್ಸಿಲ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುವ ಕಡಿಮೆ ಸಂಖ್ಯೆಯಲ್ಲಿರುವ ಮತದಾರರನ್ನು ತಲುಪಲು ಉಡುಗೊರೆ, ನಗದು ಆಮಿಷಗಳು ಸುಲಭ ಮಾರ್ಗಗಳಾಗಿವೆ.ಮತದಾರರನ್ನು ಪಟ್ಟಿಗೆ ಸೇರಿಸಲು ಉಪಕ್ರಮ ಕೈಗೊಂಡಿರುವ ಕೆಲವರು, ಗಾಲಾ ಪಾರ್ಟಿಗಳನ್ನು ಆಯೋಜಿಸಿದ್ದಾರೆ ಎಂದು ಮೂಲಗಳು ಹೇಳಿವೆ.
|
5 |
+
ಮೊನ್ನೆ ಬಿಜೆಪಿ ಕಾರ್ಯಕರ್ತರಿಗೆ ಆನೇಕಲ್ನಲ್ಲಿ ಗೋದಾಮಿನಲ್ಲಿ ಬೆಂಗಳೂರು ಪದವೀಧರರ ಪರಿಷತ್ತಿನ ಅಭ್ಯರ್ಥಿಗೆ ಸೇರಿದ ಉಡುಗೊರೆ ಬಾಕ್್ಸಗಳನ್ನು ದಾಸ್ತಾನು ಮಾಡಿರುವುದು ಪತ್ತೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಗೋದಾಮಿನ ಮೇಲೆ ದಾಳಿ ನಡೆಸಿದಾಗ ಅಭ್ಯರ್ಥಿಗಳು ಮತದಾರರಿಗೆ ನಗದು ಹಂಚಲು ಗೋದಾಮು ನಡೆಸಲಾಗುತ್ತಿದೆ ಎಂದು ನಾಯಕರೊಬ್ಬರು ಆರೋಪಿಸಿದ್ದಾರೆ.
|
6 |
+
ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿರುವ ರಾಜಕೀಯ ಮುಖಂಡರೂ ಆಗಿರುವ ಶಿಕ್ಷಕರೊಬ್ಬರು, ಕಳೆದ ಬಾರಿ ಅಭ್ಯರ್ಥಿಯೊಬ್ಬರು ಪ್ರತಿ ಮತಕ್ಕೆ 5,000 ರೂ. ಹಂಚಿದ್ದರು. ಈ ಬಾರಿ 10 ಸಾವಿರ ರೂ ನೀಡುತ್ತಿದ್ದಾರೆ. ದಕ್ಷಿಣ ಶಿಕ್ಷಕರಂತಹ ಕೆಲವು ಕೌನ್ಸಿಲ್ ಸ್ಥಾನಗಳಲ್ಲಿ, ಪ್ರತಿ ಮತಕ್ಕೆ 25,000 ರೂ. ನೀಡುತ್ತಿದ್ದಾರೆ.
|
7 |
+
ಒಬ್ಬ ಅಭ್ಯರ್ಥಿಯು ಅರ್ಧದಷ್ಟು ಮತದಾರರನ್ನು ಅಕ್ರಮ ಮಾರ್ಗಗಳ ಮೂಲಕ ತಲುಪಿದರೆ ಮತ್ತು ಅವರ ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆಯುವುದು ಖಚಿತವಾಗಿದ್ದರೆ, ಅವರ ಗೆಲುವು ಬಹುತೇಕ ಖಚಿತವಾಗಿರುತ್ತದೆ. ಸುಮಾರು 20 ವರ್ಷಗಳ ಹಿಂದೆ ಅಭ್ಯರ್ಥಿಗಳು ಅಂಚೆ ಕಾರ್ಡ್ಗಳನ್ನು ಕಳುಹಿಸುವ ಮೂಲಕ ಮತ ಕೇಳುತ್ತಿದ್ದರು ಎಂದು ಹೇಳುತ್ತಾರೆ.
|
8 |
+
ಲೋಕಸಭೆ ಚುನಾವಣೆಗಿಂತ ಭಿನ್ನವಾಗಿ, ಪರಿಷತ್ ಚುನಾವಣೆಯಲ್ಲಿ ವೆಚ್ಚದ ಮೇಲೆ ಯಾವುದೇ ಮಿತಿಯಿಲ್ಲ ಮತ್ತು ಅಭ್ಯರ್ಥಿಗಳು ಭಾರತೀಯ ಚುನಾವಣಾ ಆಯೋಗದ ಮುಂದೆ ಅದನ್ನು ಸಲ್ಲಿಸುವ ಸಾಧ್ಯತೆಯಿಲ್ಲ. ಎಲ್ಲಾ ವೆಚ್ಚದಲ್ಲಿಯೂ ಗೆಲುವು ಸಾಧಿಸಲು ದೊಡ್ಡ ಮೊತ್ತವನ್ನು ಖರ್ಚು ಮಾಡುವ ���ದ್ದೇಶ ಹೊಂದಿರುವ ಕೆಲವು ಅಭ್ಯರ್ಥಿಗಳಿಗೆ ಇದು ವರದಾನವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.
|
9 |
+
ಉಚಿತವಾಗಿ ಹಣ ಹಂಚಿಕೆ ಮಾಡುವುದು ಸೇರಿದಂತೆ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ಭ್ರಷ್ಟ ಪದ್ಧತಿಗಳಡಿ ಬರುತ್ತದೆ. ಗೋದಾಮುಗಳಲ್ಲಿ ಉಚಿತ ಉಡುಗೊರೆಗಳನ್ನು ಹಂಚಲು ವಸ್ತುಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದರೆ ದಾಳಿ ನಡೆಸುತ್ತೇವೆ. ಚುನಾವಣಾ ಪ್ರಚಾರಕ್ಕಾಗಿ ಕಾನೂನು ವೆಚ್ಚಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದೇ ಮಿತಿಯಿಲ್ಲ ಎಂದು ಆಯೋಗದ ಮೂಲಗಳು ತಿಳಿಸಿವೆ.
|
10 |
+
ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು: ಬೆಂಗಳೂರು ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ಮತದಾರರಿಗೆ ಆಮಿಷವೊಡ್ಡಲು ಉಡುಗೊರೆ ಹಂಚಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ನಾಯಕರು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
|
eesanje/url_46_142_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಹೆಚ್.ಡಿ.ರೇವಣ್ಣ ಮಧ್ಯಂತರ ಜಾಮೀನು ಸೋಮವಾರದವರಿಗೆ ಮುಂದುವರಿಕೆ
|
2 |
+
ಬೆಂಗಳೂರು,ಮೇ17-ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಸ್ವೀಕಾರದ ಕುರಿತ ಮೇ.20ಕ್ಕೆ ಎಸಿಎಂಎಂ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
|
3 |
+
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯ ತೀರ್ಪು ಕಾಯ್ದಿರಿಸಿದ್ದು ಎಚ್ ಡಿ ರೇವಣ್ಣ ಅವರ ಮಧ್ಯಂತರ ಜಾಮೀನನ್ನ ಮೇ.20 ರ ವರೆಗೆ ಮುಂದುವರೆಸಿದೆ. ನಿನ್ನೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ರೇವಣ್ಣ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಂದು ಮಧ್ಯಾಹ್ನ ಮತ್ತೆ ವಿಚಾರಣೆ ಕೈಗೆತ್ತಿಕೊಂಡಾಗ ಎಸ್ಐಟಿ ಪರ ವಕೀಲರಾದ ಜಾಯ್ನಾ ಕೊಠಾರಿ ಅವರು ಪ್ರಬಲ ವಾದ ಮಂಡಿಸಿ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು.
|
4 |
+
ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ದಾಖಲಾದ 354 ಸೆಕ್ಷನ್ ಹಾಕಲಾಗಿತ್ತು. ಸಂತ್ರಸ್ತೆ ವಿಚಾರಣೆ ಬಳಿಕ 376 ಸೆಕ್ಷನ್ ಸೇರಿಸಲಾಗಿದೆ ಎಂದು ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಆರೋಪಗಳು ಮತ್ತು ನಲ್ಲಿ ದಾಖಲಾದ ಅಂಶಗಳ ವಿವರಗಳನ್ನು ನ್ಯಾಯಾಲಯಕ್ಕೆ ನೀಡಿದರು.
|
5 |
+
ಇಬ್ಬರ ವಿರುದ್ಧ ಅತ್ಯಾಚಾರ ದೂರು ದಾಖಲಾಗಿದ್ದು, ದೂರು ವಿಭಜಿಸಲು ಸಾಧ್ಯವಿಲ್ಲ. ಜಾಮೀನು ಅರ್ಜಿ ಮ್ಯಾಜಿಸ್ಟ್ರೇಟ್ ಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ. 376 ಸೆಕ್ಷನ್ನಡಿ ದಾಖಲಾಗಿರುವುವದರಿಂದ 436 ಅಡಿ ಜಾಮೀನು ಅರ್ಜಿ ಊರ್ಜಿತವಾಗುವುದಿಲ್ಲ. ಇದು ಜಾಮೀನು ರಹಿತ ಅಪರಾಧ. ಆರೋಪ ಪಟ್ಟಿ ಸಲ್ಲಿಸಿದ ನಂತರವೇ ಯಾರ ಮೇಲೆ ಏನು ಆರೋಪ ಎಂದು ತಿಳಿಯಲಿದೆ. ಇಬ್ಬರ ವಿರುದ್ಧ ತನಿಖೆ ನಡೆಯುತ್ತಿದೆ. ಹೀಗಾಗಿ ಜಾಮೀನು ನೀಡಬಾರದೆಂದು ಹೇಳಿದರು.
|
6 |
+
ಎಸ್ಐಟಿ ಪರ ವಕೀಲರಾದ ಅಶೋಕ್ ನಾಯಕ್ ವಾದ ಮಂಡಿಸಿ, ಎಚ್.ಡಿ.ರೇವಣ್ಣ ಅವರು ಪ್ರಭಾವಿ ರಾಜಕಾರಣಿ. ಅವರಿಗೆ ಮಧ್ಯಂತರ ಜಾಮೀನು ನೀಡಬಾರದಿತ್ತು ಎಂದು ಹೇಳಿದಾಗ, ಇದನ್ನು ನೀವು ಮೇಲಿನ ಕೋರ್ಟ್ನಲ್ಲಿ ಪ್ರಶ್ನಿಸಬಹುದೆಂದು ನ್ಯಾಯಾ„ೀಶರು ಹೇಳಿದರು. ಇಬ್ಬಿಬ್ಬರು ಸರ್ಕಾರಿ ಪರ ಅಭಿಯೋಜಕರು ವಾದ ಮಂಡಿಸುತ್ತಿರುವುದಕ್ಕೆ ಎಚ್.ಡಿ.ರೇವಣ್ಣ ಪರ ವಕೀಲರಾದ ಸಿ.ವಿ.ನಾಗೇಶ್ ಆಕ್ಷೇಪ ವ್ಯಕ್ತಪಡಿಸಿದರು.ನನ್ನ ಕ್ಷಕ್ಷಿದಾರರಾದ ರೇವಣ್ಣ ವಿರುದ್ಧ ಜಾಮೀನು ನೀಡಬಹುದಾದಂತಹ ಪ್ರಕರಣಗಳು ದಾಖಲಾಗಿದೆ.
|
7 |
+
ಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲೂ ಜಾಮೀನು ನೀಡಬಹುದಾಗಿದೆ. ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಬೇಕೆಂದು ಎಂದು ಮನವಿ ಮಾಡಿದರು. ರೇವಣ್ಣ ವಿರುದ್ದ ಎ-ïಐಆರ್ ದಾಖಲಿಸಿರುವುದೇ ಕಾನೂನು ಬಾಹಿರ ಸಂತ್ರಸ್ಥ ಮಹಿಳೆ ಹೊಳೆನರಸೀಪುರ ಠಾಣೆಗೆ ಹೋಗಿಯೇ ಇಲ್ಲ,ಬೆಂಗಳೂರಿಗೆ ಬಂದಿದ್ದ ಸಬ್ಇನ್ಸ��ಪೆಕ್ಟರ್ರೊಬ್ಬರು ದೂರು ಪಡೆದುಕೊಂಡಿದ್ದಾರೆ,ತಮಗೆ ತೋಚಿದ ರೀತಿಯಲ್ಲಿ ದೂರು ಬರೆಸಿಕೊಂಡಿದ್ದಾರೆ,ಲೈಂಗಿಕ ದೌರ್ಜನ್ಯ ಬೇರೆ,ಅತ್ಯಾಚಾರ ಬೇರೆ,ಆ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಂದು ಹೇಳುವುದಕ್ಕೇ ಬರುವುದಿಲ್ಲ ,ಇದು ಟೈಪ್ ಮಾಡಿ ಸಿದ್ದಪಡಿಸಿಕೊಂಡಿರುವ ದೂರು ಎಂದು ಪ್ರಭಲ ವಾದ ಮಂಡಿಸಿದರು.
|
8 |
+
ಸಂತ್ರಸ್ಥೆ ನೀಡಿರುವ ದೂರಿನಲ್ಲಿ ಸಾಕಷ್ಟು ವ್ಯತ್ಯಾಸವಿದೆ,ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಅವರಿಗೆ ಮನೆ ಖಾಲಿ ಮಾಡಿ ನಾಲ್ಕೂವರೆ ವರ್ಷ ಆದ ಮೇಲೆ ಗೊತಾಗಿದೆ ಎಂದು ದೂರಿನಲ್ಲಿರುವ ವ್ಯತ್ಯಾಸದ ಬಗ್ಗೆ ಎಳೆಎಳೆಯಾಗಿ ಬಿಡಿಸಿಟ್ಟರು. ಚುನಾವಣಾ ಸಂದರ್ಭದಲ್ಲಿ ಈ ಆರೋಪ ಕೇಳಿಬಂದಿರುವುದರಿಂದ ಇದು ರಾಜಕೀಯ ಷಡ್ಯಂತ್ರದ ಭಾಗವಾಗಿದೆ ಎಂದರು ಆರಂಭದಲ್ಲಿ 376 ಸೆಕ್ಷನ್ ಹಾಕಿಲ್ಲ ಎಂದು ಉಲೇಕಿಸಿ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನಿನ ಅರ್ಜಿ ವಾಪಸ್ ಪಡೆಯಲಾಗಿತ್ತು ಆದರೆ ಈಗ 376 ಇದೆ ಎಂದು ಹೇಳಲಾಗುತ್ತಿದೆ ಆಗಾಗಿದ್ದರೆ ನಾವು ನಿರೀಕ್ಷಣಾ ಜಾಮೀನಿನ ಅರ್ಜಿ ವಾಪಸ್ ಪಡೆಯುತ್ತಿರಲಿಲ್ಲ ಎಂದು ಹೇಳಿದರು .ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ಮೇ20ಕ್ಕೆ ತೀರ್ಪು ಕಾಯ್ದಿರಿಸಿತು.
|
eesanje/url_46_142_7.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜು.1 ರಿಂದ ನೂತನ ಕಾನೂನುಗಳ ಅನುಷ್ಠಾನ : ಬಿ.ದಯಾನಂದ
|
2 |
+
ಬೆಂಗಳೂರು,ಮೇ 17-ಐಪಿಸಿ, ಸಿಆರ್ಪಿಸಿ ಸೇರಿದಂತೆ ದೇಶದ ಕಾನೂನುಗಳು ಬದಲಾವಣೆಯಾಗಿದ್ದು, ಜುಲೈ 1 ರಿಂದ ಜಾರಿಯಾಗಲಿರುವ ನೂತನ ಕಾನೂನುಗಳ ಅನುಷ್ಠಾನಕ್ಕೆ ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಿದ್ಧರಾಗಬೇಕೆಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
|
3 |
+
ನಗರದ ಆಡುಗೋಡಿಯಲ್ಲಿನ ಸಿಎಆರ್ ಸೌತ್ ಕವಾಯತು ಮೈದಾನದಲ್ಲಿ ಇಂದು ಏರ್ಪಡಿಸಿದ್ದ ಮಾಸಿಕ ಕವಾಯತಿನಲ್ಲಿ ವಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಪೂರ್ವದಿಂದಲೂ ಜಾರಿಯಲ್ಲಿದ್ದ ಐಪಿಸಿ, ಸಿಆರ್ಪಿಸಿ ಮತ್ತು ಸಾಕ್ಷ್ಯ ಕಾಯ್ದೆ ಬದಲಾಗಿ ಕೇಂದ್ರ ಸರ್ಕಾರ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ಸಾಕ್ಷ್ಯ ಸಂಹಿತೆಯನ್ನು ರಚಿಸಿದ್ದು, ಅವು ಕಾನೂನಿನ ಸ್ವರೂಪ ಪಡೆದುಕೊಂಡು ಜು.1 ರಿಂದ ಅನುಷ್ಠಾನಗೊಳ್ಳಲಿವೆ ಎಂದರು.
|
4 |
+
ಈ ನೂತನ ಕಾನೂನುಗಳ ಪರಿಕರಗಳಲ್ಲಿ ಹೊಸ ಸೆಕ್ಷನ್ಗಳೇನು? ಹೊಸ ಮತ್ತು ಹಳೆ ಸೆಕ್ಷನ್ಗಳಲ್ಲಿನ ಬದಲಾವಣೆ ಹಾಗೂ ವ್ಯತ್ಯಾಸದ ಬಗ್ಗೆ ತಿಳಿದುಕೊಳ್ಳಬೇಕು. ದೇಶದಲ್ಲಿ ಒಂದು ಬಾರಿ ಕಾನೂನು ಅನುಷ್ಠಾನವಾದ ಮೇಲೆ ಅದನ್ನು ಸಂಪೂರ್ಣವಾಗಿ ಪರಿಪಾಲನೆ ಮಾಡಬೇಕಾಗಿರುವುದು ನಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿದರು.
|
5 |
+
ಜುಲೈ 1 ರ ಪೂರ್ವವಾಗಿಯೇ ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕಾಗುತ್ತದೆ. ಈಗಾಗಲೇ ಬೆಂಗಳೂರು ನಗರದ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿ ಕೊಡಲಾಗಿದೆ. ಮುಂದಿನ 15 ದಿನಗಳಲ್ಲಿ ಮತ್ತಷ್ಟು ಜನರಿಗೆ ತರಬೇತಿ ಪ್ರಾರಂಭವಾಗಲಿದೆ ಎಂದು ಹೇಳಿದರು.
|
6 |
+
ಇದರಲ್ಲಿ ಮುಖ್ಯವಾಗಿ ಎಸಿಪಿ ಮಟ್ಟದ ಅಧಿಕಾರಿಗಳು ತಮ ಉಪವಿಭಾಗದ ಅಧೀನದಲ್ಲಿರುವ ಎಲ್ಲಾ ಪೊಲೀಸ್ ಠಾಣೆಗಳ ಮತ್ತು ಫೋಕಸ್ ಗ್ರೂಪ್ ಅಧಿಕಾರಿಗಳಿಗೆ, ಸಬ್ ಇನ್್ಸಪೆಕ್ಟರ್ಗಳಿಗೆ ಐಒ ಮತ್ತು ಐಒ ಅಸಿಸ್ಟೆಂಟ್ಗಳು ಮತ್ತು ಸ್ಟೇಷನ್ ರೈಟರ್ಗಳಾದ ನಾಲ್ಕು ಅಥವಾ ಐದು ಸಿಬ್ಬಂದಿಗಳಿಗೆ ಅರಿವು ಮೂಡಿಸಬೇಕಾಗುತ್ತದೆ ಎಂದರು.
|
7 |
+
ಅಭಿಯೋಜನಾ ಅಧಿಕಾರಿಗಳು, ನ್ಯಾಯಾಲಯದ ಅಧಿಕಾರಿಗಳು ಅಥವಾ ಸ್ಥಳೀಯವಾಗಿರುವ ಕಾನೂನು ಕಾಲೇಜುಗಳ ನೆರವು ಪಡೆದು ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಇದರ ಜೊತೆಗೆ ಸೆಲ್್ಫ ಲರ್ನಿಂಗ್ ಮೂಲಕ ಈ ಕಾನೂನುಗಳ ಬಗ್ಗೆ ಅರಿವು ಪಡೆದುಕೊಳ್ಳಬೇಕು. ಇದು ಈಗಾಗಲೇ ಸಾರ್ವಜನಿಕವಾಗಿ ಮಾಹಿತಿ ಇದ್ದು, ಯುಟ್ಯೂಬ್ ಮತ್ತು ಇತರೆ ಆ್ಯಪ್ಗಳಲ್ಲೂ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು.
|
8 |
+
ಜೊತೆಗೆ ಕರ್ನಾಟಕ ಪೊಲೀಸ್ ಅಕಾಡೆಮಿ ಕೂಡ ಇದರ ಬಗ್ಗೆ ಕಿರುಹೊತ್ತಿಗೆಗಳನ್ನು ಬಿಡುಗಡೆ ಮಾಡಿದ್ದು, ಇದು ಎಲ್ಲಾ ಪೊಲೀಸ್ ಠಾಣೆಗಳಿಗೆ ನೀಡಲಾಗಿದೆ. ಅವುಗಳನ್ನು ಓದಿ ಅರ್ಥೈಸಿಕೊಳ್ಳಿ. ಏನಾದರೂ ಸಂಶಯಗಳಿದ್ದರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು.
|
9 |
+
ಜು.1 ರಿಂದ ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ, ನೂತನ ಕಾನೂನು ಮೂಲಕ ಪ್ರಕರಣ ದಾಖಲಿಸಬೇಕಾಗುತ್ತದೆ. ಯಾವ ಕಾಯಿದೆಯಡಿ ಪ್ರಕರಣ ದಾಖಲಿಸಬೇಕು ಎಂಬುದರ ಸಮಗ್ರ ಮಾಹಿತಿ ಜು.1 ರೊಳಗಾಗಿ ಯಾವುದೇ ಸಂಶಯವಿಲ್ಲದೆ ಎಲ್ಲಾ ಪೊಲೀಸ್ ಅಧಿಕಾರಿಗಳು ತಿಳಿದುಕೊಂಡಿರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
|
10 |
+
ಸಾರ್ವಜನಿಕರಿಗೆ ಇದರಿಂದ ಯಾವುದೇ ಅನಾನಕೂಲ ಅಥವಾ ತೊಂದರೆಯಾಗದಂತೆ ಎಫ್ಐಆರ್ ದಾಖಲಿಸಬೇಕು. ಈ ಸಂಬಂಧ ನ್ಯಾಯಾಲಯಗಳಲ್ಲಿ ಇಲಾಖೆಗೆ ಯಾವುದೇ ಮುಜುಗರ ಉಂಟುಮಾಡದಂತೆ ಎಸಿಪಿ ಮಟ್ಟದ ಅಧಿಕಾರಿಗಳು ಗಮನ ವಹಿಸಬೇಕು ಎಂದು ಹೇಳಿದರು.
|
11 |
+
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ಇದಕ್ಕೆ ಸಹಕರಿಸಿದ ನ್ಯೂಡಲ್ ಅಧಿಕಾರಿಗಳು, ಡಿಸಿಪಿ, ಎಸಿಪಿ ಅಧಿಕಾರಿಗಳ ಉತ್ತಮ ಸಂಯೋಜನೆ ಕಾರಣವಾಗಿದೆ. ಈ ಎಲ್ಲಾ ಅಧಿಕಾರಿಗಳಿಗೆ ಆಯುಕ್ತರು ಅಭಿನಂದನೆ ಸಲ್ಲಿಸಿದರು.
|
eesanje/url_46_142_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಣ್ಣು-ಕಿವಿ, ಹೃದಯ ಇಲ್ಲದ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ : ಆರ್.ಅಶೋಕ್ ವಾಗ್ದಾಳಿ
|
2 |
+
ಬೆಂಗಳೂರು,ಮೇ17-ಕಣ್ಣು-ಕಿವಿ, ಹೃದಯ ಇಲ್ಲದ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ, ನರೇಗಾ ಹಾಗೂ ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದನ್ನು ತಪ್ಪಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
|
3 |
+
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣ ಸಾಲಕ್ಕೆ ಜಮೆ ಮಾಡದಂತೆ ಬ್ಯಾಂಕ್ಗಳಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಿ. ಬ್ಯಾಂಕ್ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಲಿ ಎಂದು ಆಗ್ರಹಿಸಿದ್ದಾರೆ.
|
4 |
+
ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರವನ್ನು ಬಿಡುಗಡೆಗೊಳಿಸಿದೆ. ಈ ಪರಿಹಾರದ ಹಣವನ್ನು ಹಳೆ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣದ ಕ್ರಮವಹಿಸದೆ ಕೈ ಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
5 |
+
ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಪಾಲನ್ನೂ ನೀಡಲಾಗಿತ್ತು. ಈಗ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೆ ಸುಮ್ಮನಿದ್ದಾರೆ ಎಂದು ಟೀಕಿಸಿದ್ದಾರೆ.
|
6 |
+
ಸಹಾಯಧನ ಘೋಷಿಸಿಕಳೆದ ವರ್ಷ ಹಿಂಗಾರು, ಮುಂಗಾರು ಎರಡೂ ಕೈ ಕೊಟ್ಟಿದ್ದರಿಂದ ಈ ವರ್ಷ ರೈತರ ಬಳಿ ಬಿತ್ತನೆ ಬೀಜ, ರಸಗೊಬ್ಬರ ಕೊಳ್ಳಲು, ಉಳುಮೆ ಮಾಡಲೂ ಸಹ ಹಣವಿಲ್ಲದ ಪರಿಸ್ಥಿತಿ ಇದೆ. ಆದ್ದರಿಂದ ಈ ಕೂಡಲೇ ಎಕರೆಗೆ 5,000 ರೂ. ನಂತೆ ರೈತರಿಗೆ ವಿಶೇಷ ಸಹಾಯಧನ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
|
7 |
+
ಇಲ್ಲವಾದಲ್ಲಿ ಈ ಬಾರಿಯೂ ಕೃಷಿ ಬೆಳೆಗಳು ಕೈ ಕೊಟ್ಟು ಆಹಾರ ಪದಾರ್ಥಗಳ ಕೊರತೆಯಿಂದ ಹಣದುಬ್ಬರ ಉಂಟಾಗಿ ತೀವ್ರ ಬೆಲೆ ಏರಿಕೆ ಆಗುವುದು ನಿಶ್ಚಿತ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನಾಡಿನ ಕೃಷಿ ಚಟುವಟಿಕೆಯನ್ನು ಉಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
|
eesanje/url_46_142_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
12ನೇ ತರಗತಿ ಅಂಕಗಳನ್ನು ದಾಖಲಿಸಲು ಕೆಸಿಇಟಿಗೆ ಮೇ.20ರ ಗಡುವು
|
2 |
+
ಬೆಂಗಳೂರು,ಮೇ17-ಪ್ರಸಕ್ತ ಸಾಲಿನ ಯುಜಿಸಿಇಟಿ ಪರೀಕ್ಷೆ ಬರೆದಿರುವ ಸಿಬಿಎಸ್ಸಿ, ಸಿಐಎಸ್ಸಿಇ, ಐಜಿಸಿಎಸ್ಇ ಮುಂತಾದ ಸಂಸ್ಥೆಗಳಿಂದ 12ನೇ ತರಗತಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹಾಗೂ ನಾಟಾ ಅಂಕಗಳನ್ನು ಮೇ 20ರೊಳಗಾಗಿ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.
|
3 |
+
ಸಿಬಿಎಸ್ಸಿ ಸೇರಿದಂತೆ ವಿವಿಧ ಬೋರ್ಡ್ಗಳಲ್ಲಿ ಪ್ರಸಕ್ತ ಸಾಲಿನಲ್ಲಿ 12ನೇ ತರಗತಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಕೆಇಎ ಪೋರ್ಟಲ್ಗಳ ಮೂಲಕ ನಿಗದಿತ ಲಿಂಕ್ನಲ್ಲಿ ಅಂಕಗಳನ್ನು ದಾಖಲಿಸಲು ಮತ್ತು ಮಾರ್ಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಲು ಸೂಚಿಸಿದೆ.
|
4 |
+
2024ಕ್ಕಿಂತ ಮೊದಲೇ ಅಂದರೆ ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಮತ್ತು 12ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಸಹ ಅಂಕಗಳನ್ನು ದಾಖಲಿಸಲು ಸೂಚಿಸಲಾಗಿದೆ.
|
5 |
+
ಅರ್ಹತಾ ಕಂಡಿಕೆ, ಕ್ಲಾಸ್-ವೈ ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳು ಸಹ ಅಂಕಗಳನ್ನು ಪೋರ್ಟಲ್ನಲ್ಲಿ ದಾಖಲಿಸಬೇಕಿದೆ. ಕರ್ನಾಟಕದ ದ್ವಿತೀಯ ಪಿಯುಸಿ 2024ರ ಪರೀಕ್ಷೆಯ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳಲಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
|
6 |
+
ಆರ್ಕಿಟೆಕ್ಚರ್ ಕೋರ್ಸ್ಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024 ನಾಟಾ ಪರೀಕ್ಷೆಯ ಅಂಕಗಳನ್ನು ಅರ್ಹತೆಯ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ನ್ನು ಸಂಪರ್ಕಿಸಲು ಕೋರಿದೆ.
|
eesanje/url_46_143_1.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಚಿಂತನೆ
|
2 |
+
ಬೆಂಗಳೂರು,ಮೇ17-ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್ಐಟಿನಿಂದ ಸಿಬಿಐಗೆ ವರ್ಗಾಯಿಸಲು ಚಿಂತನೆ ನಡೆದಿದೆ.ಎಸ್ಐಟಿ ತನಿಖಾ ವ್ಯಾಪ್ತಿ ಸೀಮಿತವಾಗಿರುವುದರಿಂದ ಪ್ರಕರಣದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳ ಹೆಸರು, ಕೇಳಿಬಂದಿರುವುದರಿಂದ ಸಿಬಿಐಗೆ ವಹಿಸುವಂತೆ ಎಸ್ಐಟಿಗೆ ನಿರ್ದೇಶನ ನೀಡಬೇಕೆಂದು ಖುದ್ದು ಸಂತ್ರಸ್ತೆಯರೇ ನ್ಯಾಯಾಲಯದ ಮೊರೆ ಹೋಗಲು ಮುಂದಾಗಿದ್ದಾರೆ.
|
3 |
+
ಅಶ್ಲೀಲ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಸಂತ್ರಸ್ತ ಮಹಿಳೆಯರು ಎಸ್ಐಟಿನಿಂದ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ನ್ಯಾಯಾಲಯಕ್ಕೆ ವಕೀಲರ ಮೂಲಕ ವಿಶೇಷ ಮೇಲನವಿ ಅರ್ಜಿಯನ್ನು ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
|
4 |
+
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಸದಕ್ಕೆ ಅವರು ಸ್ವದೇಶಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ವಿದೇಶದಲ್ಲಿರುವ ಯಾವುದೇ ಒಬ್ಬ ಆರೋಪಿಯನ್ನು ಕರೆತರಬೇಕಾದರೆ ಕೇಂದ್ರ ಸರ್ಕಾರದ ಸಹಕಾರ ಅಗತ್ಯ. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ಸಾಧ್ಯವಿಲ್ಲದ ಕಾರಣ ಪ್ರಜ್ವಲ್ ರೇವಣ್ಣನನ್ನು ಕರೆತರುವುದು ಸಿಬಿಐನಿಂದ ಮಾತ್ರ ಸಾಧ್ಯ ಎಂಬುದು ಸಂತ್ರಸ್ತರ ಅಭಿಪ್ರಾಯ.
|
5 |
+
ಪಶ್ಚಿಮ ಬಂಗಾಳದ ಸಂದೇಶ್ ಕಾಳಿ ಪ್ರಕರಣವನ್ನು ಮೊದಲು ಅಲ್ಲಿನ ಟಿಎಂಸಿ ಸರ್ಕಾರ ಸಿಬಿಐಗೆ ವಹಿಸಲು ಹಿಂದೇಟು ಹಾಕಿತ್ತು. ಕೊನೆಗೆ ಸಂತ್ರಸ್ತೆಯರು ಹೈಕೋರ್ಟ್ಗೆ ಮೇಲನವಿ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿದ್ದರು. ಅಂತಿಮವಾಗಿ ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಆದೇಶಿಸಿತ್ತು. ಬಳಿಕ ಟಿಎಂಸಿ ಸರ್ಕಾರ ಇದನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್ನಲ್ಲಿ ಮೇಲನವಿ ಅರ್ಜಿ ಸಲ್ಲಿಸಿತ್ತು. ಕೊನೆಗೆ ಕೋಲ್ಕತ್ತಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿ ಹಿಡಿಯಿತು.
|
6 |
+
ಇದೀಗ ಅಶ್ಲೀಲ ವಿಡಿಯೋದಲ್ಲಿ ಕೇಳಿಬಂದಿರುವ ಸಂತ್ರಸ್ತೆಯರು ಸಿಬಿಐ ತನಿಖೆಗೆ ಒತ್ತಾಯಿಸಿ ನ್ಯಾಯಾಲಯದ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರೂ ಅಂತಿಮವಾಗಿ ಸರ್ಕಾರದ ವ್ಯಾಪ್ತಿಯಲ್ಲೇ ಬರುವುದರಿಂದ ಕೆಲವು ಪ್ರಭಾವಿಗಳನ್ನು ಬಂಧಿಸಲು ಸಾಧ್ಯವಿಲ್ಲ ಎಂಬುದು ಸಂತ್ರಸ್ತರ ಅಳಲು.
|
7 |
+
ಅಲ್ಲದೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳ ಹೆಸರು ಕೇಳಿಬಂದಿತ್ತು. ಸಾಲದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಕರಣದ ತಿಮಿಂಗಲವೇ ಸರ್ಕಾರದಲ್ಲಿದೆ. ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವೇ? ಅವರನ್ನೇ ಬಂಧಿಸಿದರೆ ಎಲ್ಲವೂ ಹೊರಬೀಳಲಿದೆ ಎಂದು ಒತ್ತಾಯಿಸಿದ್ದರು.
|
8 |
+
ಸಂಶಯದ ನಡೆ:ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ 33/2024 ಪ್ರಕರಣಕ್ಕೆ ಹೊಸ ಹೆಸರು ಸೇರಿಸಿ ಇಬ್ಬರನ್ನು ಬಂಧಿಸಲಾಗಿದೆ. 6 ಮತ್ತು 7ನೇ ಆರೋಪಿಗಳಾಗಿ ಚೇತನ್ ಹಾಗೂ ಲಿಖಿತ್ ಬಂಧನವಾಗಿದೆ.
|
9 |
+
6 ಮತ್ತು 7ನೇ ಆರೋಪಿ ಬಂಧನವಾದರೂ ಮೊದಲ ಐದು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ, ಕಾಂಗ್ರೆಸ್ ಕಾರ್ಯಕರ್ತರಾದ ನವೀನ್ ಗೌಡ, ಚೇತನ್ ಹಾಗೂ ಪುಟ್ಟಿ ಆಲಿಯಾಸ್ ಪುಟ್ಟರಾಜ್ರನ್ನು ಎಸ್ಐಟಿ ಅಧಿಕಾರಿಗಳು ಈವರೆಗೂ ಬಂಧಿಸಿಲ್ಲ. ಅಲ್ಲದೇ ಪೆನ್ಡ್ರೈವ್ ಹೊಂದಿದ್ದ ಮೂಲ ವ್ಯಕ್ತಿಯಾಗಿರುವ ಸಂಸದನ ಮಾಜಿ ಕಾರು ಚಾಲಕನನ್ನೂ ಕೂಡ ತನಿಖಾ ತಂಡ ವಶಕ್ಕೆ ಪಡೆಯದೇ ಇರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
|
10 |
+
ಮಾಜಿ ಶಾಸಕ ಪ್ರೀತಂಗೌಡ ಆಪ್ತ ಶರತ್ ಕೂಡ ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಹಾಸನದ ಮೂರನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಕಾರ್ತಿಕ್, ಚೇತನ್, ನವೀನ್ ಗೌಡ ಹಾಗೂ ಪುಟ್ಟರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ.
|
11 |
+
ಜಾಮೀನು ಅರ್ಜಿ ವಜಾಗೊಂಡರೂ ಇವರ ಬಂಧನ ಮಾತ್ರ ಆಗಿಲ್ಲ. ಈಗಾಗಲೇ ಎಸ್ಐಟಿ ಎಲ್ಲಾ ಆರೋಪಿಗಳ ಮನೆ ಶೋಧ ನಡೆಸಿದೆ. ಇಷ್ಟಾದರೂ ವೀಡಿಯೋ ವೈರಲ್ ಮಾಡಿದ ಆರೋಪಿಗಳನ್ನು ಎಸ್ಐಟಿ ಬಂಧಿಸಿದೇ ಅಚ್ಚರಿ ಮೂಡಿಸಿದೆ.ಎಫ್ಐಆರ್ನಲ್ಲಿ ಹೆಸರಿದ್ದ ಐವರು ಆರೋಪಿಗಳ ಬಂಧನವಾಗದಿರುವ ಬಗ್ಗೆ ಜೆಡಿಎಸ್ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆಯೇ ಐವರು ಆರೋಪಿಗಳ ಬಂಧನಕ್ಕೆ ಜೆಡಿಎಸ್ ಆಗ್ರಹಿಸಿತ್ತು. ಪ್ರಕರಣದ ತನಿಖೆ ಚುರುಕುಗೊಂಡರೂ ಆರೋಪಿಗಳ ಬಂಧನವಾಗದಿರುವ ಬಗ್ಗೆ ಚರ್ಚೆ ಶುರುವಾಗಿದೆ.
|
eesanje/url_46_143_10.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಜನ್ಮ ದಿನ ಆಚರಣೆ ಮಾಡಿಕೊಳ್ಳಲ್ಲ : ಹೆಚ್.ಡಿ.ದೇವೇಗೌಡರು
|
2 |
+
ಬೆಂಗಳೂರು, ಮೇ 16-ಕಾರಣಾಂತರಗಳಿಂದ ತಮ್ಮ ಜನ್ಮ ದಿನವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
|
3 |
+
ಮೇ 18ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ನನ್ನ ಅಭಿಮಾನಿಗಳು ಹಾಗೂ ಜೆಡಿಎಸ್ ಪಕ್ಷದ ಕಾಯಕರ್ತರು ಇದ್ದಲ್ಲಿಯೇ ಶುಭ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಗೌಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
4 |
+
ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿಯ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಅವರು ಸಲಹೆ ಮಾಡಿದ್ದಾರೆ.ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.
|
eesanje/url_46_143_11.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಬಂಡಾಯದ ಬಿಸಿ
|
2 |
+
ಬೆಂಗಳೂರು, ಮೇ 16-ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ಸ್ಪರ್ಧಿಸಿದ್ದು, ಬಂಡಾಯದ ಬಿಸಿ ಎದುರಿಸುವಂತಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ವಿವೇಕಾನಂದ ಅವರು ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದು, ಅಧಿಕೃತ ಮೈತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
|
3 |
+
ಆದರೆ, ನಿನ್ನೆ ಬಿಜೆಪಿ ಅಭ್ಯರ್ಥಿಯಾಗಿ ಇ.ಸಿ.ನಿಂಗರಾಜು ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರಿದ್ದರೂ ಬಿಜೆಪಿ ಬಿ ಫಾರಂ ನೀಡಿಲ್ಲ. ಈ ಕ್ಷೇತ್ರ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಸ್ವತಂತ್ರ ಸ್ಪರ್ಧೆ ಮಾಡಲಿದ್ದಾರೆ. ಇವರಿಬ್ಬರೂ ಮೈತ್ರಿ ಪಕ್ಷಗಳಿಗೆ ತಲೆನೋವಾಗಿದ್ದಾರೆ.
|
4 |
+
ಈ ನಡುವೆ ಮೈಸೂರಿನಲ್ಲಿ ನಿಂಗರಾಜು ಅವರನ್ನು ಆರ್.ಅಶೋಕ್ ಅವರು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.ಈ ಒಂದು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ನಿಂದ ತಲಾ ಒಬ್ಬರು ಬಂಡಾಯ ಅಭ್ಯರ್ಥಿಗಳಿರುವುದು ನಾಯಕರನ್ನು ಚಿಂತೆಗೀಡು ಮಾಡಿದೆ. ಮೇ 20ರವರೆಗೂ ನಾಮಪತ್ರ ವಾಪಸ್ಸು ಪಡೆಯಲು ಅವಕಾಶವಿದ್ದು, ಅಷ್ಟರಲ್ಲಿ ನಿಂಗರಾಜು ಹಾಗೂ ಶ್ರೀಕಂಠೇಗೌಡರ ಮನವೊಲಿಸುವರೆ ಎಂಬುದನ್ನು ಕಾದು ನೋಡಬೇಕಿದೆ.
|
eesanje/url_46_143_12.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸಂಕಷ್ಟಗಳ ಪರಿಹಾರಕ್ಕಾಗಿ ದೇವರ ಮೊರೆ ಹೋದ ಮಾಜಿ ಸಚಿವ ಎಚ್.ಡಿ.ರೇವಣ್ಣ
|
2 |
+
ಬೆಂಗಳೂರು, ಮೇ 16-ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಸಂಕಷ್ಟ ಪರಿಹಾರಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ತಂದೆ ಮತ್ತು ತಾಯಿ ಅವರ ಆಶೀರ್ವಾದ ಪಡೆದ ಬಳಿಕ ಅವರು, ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಿಗೆ ಮಂಗಳವಾರ ಪೂಜೆ ಸಲ್ಲಿಸಿದ್ದರು. ಇಂದು ಬೆಳ್ಳಿಗ್ಗೆ ಜಯನಗರದಲ್ಲಿರುವ ವಿನಾಯಕ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ..
|
3 |
+
ಮಹಿಳೆಯೊಬ್ಬರ ಅಪಹರಣ ಆರೋಪ ಪ್ರಕರಣದಲ್ಲಿ ಅವರನ್ನು ಎಸ್ಐಟಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ನೀಡಿದ್ದರಿಂದ ನ್ಯಾಯಾಂಗ ಬಂಧನದಲ್ಲಿದ್ದ ರೇವಣ್ಣ ಅವರು ಮಂಗಳವಾರ ಮಧ್ಯಾಹ್ನ ಜೈಲಿನಿಂದ ಬಿಡುಗಡೆಯಾಗಿದ್ದರು.
|
4 |
+
ಬೆಂಗಳೂರಿನ ತಮ್ಮ ಮನೆಗೆ ಭೇಟಿ ನೀಡಿದ್ದ ಹಲವು ಅಭಿಮಾನಿಗಳೊಂದಿಗೆ ಮಾತಾಡುವಾಗ ಭಾವುಕರಾಗಿದ್ದ ರೇವಣ್ಣ ಅವರು ಇಂದು ಬೆಳಗ್ಗೆ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
|
5 |
+
ಮಹಾನ್ ದೈವಭಕ್ತರಾದ ರೇವಣ್ಣ ಅವರು ಆರೋಪ ಕೇಳಿಬರುವ ಮೊದಲಿನಿಂದಲೂ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸುವ ಪರಿಪಾಠವನ್ನು ಇಟ್ಟುಕೊಂಡಿದ್ದರು. ಅದೇ ರೀತಿ ಈಗಲೂ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
|
eesanje/url_46_143_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಕಾಗದ-ಪತ್ರಗಳ ಸಮಿತಿ ಸಭೆಯಲ್ಲಿ ಭಾಗಿಯಾದ ಎಚ್.ಡಿ.ರೇವಣ್ಣ
|
2 |
+
ಬೆಂಗಳೂರು,ಮೇ17-ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಇಂದು 2023-24ನೇ ಸಾಲಿನ ವಿಧಾನಸಭೆಯ ಮುಂದಿಡಲಾಗುವ ಕಾಗದ ಪತ್ರಗಳ ಸಮಿತಿ ಸಭೆ ವಿಧಾನಸೌಧದಲ್ಲಿ ಇಂದು ಜರುಗಿತು.ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಸಭೆಯನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ನಡೆಸದಂತೆ ವಿಧಾನಸಭಾಧ್ಯಕ್ಷರು ನಿರ್ದೇಶನ ನೀಡಿದ್ದರು.
|
3 |
+
ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಚುನಾವಣೆಯ ಮತದಾನ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ವಿವಿಧ ಸ್ಥಾಯಿಸಮಿತಿಗಳ ಸಭೆ ನಡೆಸಲು ಸಭಾಧ್ಯಕ್ಷರು ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ಇಂದು ರೇವಣ್ಣ ಅವರು ತಮ ಅಧ್ಯಕ್ಷತೆಯಲ್ಲಿರುವ ಕಾಗದಪತ್ರಗಳ ಸಮಿತಿ ಸಭೆಯನ್ನು ನಡೆಸಿದರು.
|
4 |
+
ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ನಂತರ ಪ್ರತಿದಿನ ಒಂದಲ್ಲ ಒಂದು ದೇವಾಲಯಕ್ಕೆ ಭೇಟಿ ನೀಡಿ, ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ ಸಲ್ಲಿಸುತ್ತಿರುವ ರೇವಣ್ಣ ಅವರು, ಇಂದು ಮಧ್ಯಾಹ್ನ ಎಂದಿನಂತೆ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದರು.
|
5 |
+
ಪ್ರತಿಕ್ರಿಯೆ ನೀಡಲು ನಿರಾಕರಣೆ :
|
6 |
+
ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ವಿಧಾನಸೌಧದಲ್ಲಿ ನಡೆದ 2023-24ನೇ ಸಾಲಿನ ವಿಧಾನಸಭೆಯ ಮುಂದಿಡಲಾಗುವ ಕಾಗದಪತ್ರಗಳ ಸಮಿತಿ ಸಭೆಯ ನಂತರ ಸುದ್ದಿಗಾರರು ರೇವಣ್ಣ ಅವರ ಪ್ರತಿಕ್ರಿಯೆ ಕೇಳಲು ಮುಂದಾದಾಗ ಏನೂ ಮಾತನಾಡುವುದಿಲ್ಲ ಎಂದಷ್ಟೇ ಹೇಳಿದರು.
|
7 |
+
ವಿಷಯ ನ್ಯಾಯಾಲಯದಲ್ಲಿ ಇರುವಾಗ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಕಾಗದಪತ್ರಗಳ ಸಮಿತಿಯ ಅಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.
|
eesanje/url_46_143_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕಾನೂನು ಸುವ್ಯವಸ್ಥೆ ಕಾಪಾಡಲು ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ : ಬೊಮ್ಮಾಯಿ
|
2 |
+
ಹುಬ್ಬಳ್ಳಿ, ಮೇ 17-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಿಕ್ಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ಕೊಲೆಯಾದ ಅಂಜಲಿ ನಿವಾಸಕ್ಕೆ ಭೇಟಿ ನೀಡಿದ ನಂತರ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು.
|
3 |
+
ಅಂಜಲಿ ಕೊಲೆ ಆಘಾತಕಾರಿ ಬೆಳವಣಿಗೆ ಆಗಿದೆ. ಆರೋಪಿಗಳಿಗೆ ಕಾನೂನಿನ ಭವೂ ಇಲ್ಲ, ಪೊಲೀಸರ ಭಯವೂ ಇಲ್ಲದಂತಾಗಿದ್ದು, ಏನು ಮಾಡಿದರೂ ನಡೆಯುತ್ತೆ ಅನ್ನೋ ಭಾವನೆ ಮೂಡಿದೆ. ನೇಹಾ ಪ್ರಕರಣ ನಡೆದ ನಂತರವೂ ಪೊಲೀಸರು ಎಚ್ಚೆತ್ತುಕೊಂಡಿಲ್ಲ. ಸಿಎಂ ಸೇರಿ ಇತರ ನಾಯಕರು ದೊಡ್ಡ ದೊಡ್ಡ ಮಾತುಗಳನ್ನಾಡಿದರು. ಏನೂ ಮಾಡದೆ ಇರೋ ಪರಿಣಾಮ ಈ ಹತ್ಯೆ ನಡೆದಿದ್ದು ಆರೋಪಿ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದರೆ ಈ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ ಎಂದರು.
|
4 |
+
ಪೊಲೀಸರೇ ಪರೋಕ್ಷವಾಗಿ ಇಂತಹ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣ. ಪೊಲೀಸ್ ಠಾಣೆಗಳು ಇರುವುದಾದರೂ ಯಾಕೆ…? ಪ್ರಶ್ನೆ ಮಾಡಿದ ಅವರು ವಿರೋಧ ಪಕ್ಷದವರು ಹೇಳಿಕೆ ಕೊಟ್ಟರೆ ರಾಜಕೀಯ ಅಂತಾರೆ, ಇಷ್ಟೆಲ್ಲಾ ಕೊಲೆ ನಡೆದರೂ ನಾವು ಬಾಯಿ ಮುಚ್ಕೊಂಡು ಕೂರಬೇಕೇ? ಎಂದು ಪ್ರಶ್ನಿಸಿದ ಅವರು, ನಿಮ ಕೈಯಲ್ಲಿ ಕಾನೂನು ಕಾಪಾಡಲು ಆಗೋಲ್ಲ ಅಂದ್ರೆ ಕೂಡಲೇ ಜಾಗ ಖಾಲಿ ಮಾಡಿ ಎಂದರು.
|
5 |
+
ಪೊಲೀಸರ ಅಮಾನತಿನಿಂದ ಈ ಪ್ರಕರಣಕ್ಕೆ ನ್ಯಾಯ ಸಿಗುತ್ತೆಯೇ..? ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಮಾಡಬೇಕು. ಆರೋಪಿಗೆ ಗಲ್ಲು ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಅಂಜಲಿ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ನಮ ಹೋರಾಟವನ್ನು ಇಲ್ಲಿಗೇ ಕೈ ಬಿಡಲ್ಲ. ಇದೇ ರೀತಿ ಕೊಲೆ ಪ್ರಕರಣ ನಡೆದರೆ ಜನವೇ ಸರ್ಕಾರದ ವಿರುದ್ಧ ತಿರುಗಿ ಬೀಳ್ತಾರೆ ಎಂದು ಎಚ್ಚರಿಕೆೆ ನೀಡಿದ್ದಾರೆ.
|
eesanje/url_46_143_4.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ : 103 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
|
2 |
+
ಬೆಂಗಳೂರು,ಮೇ 17-ವಿಧಾನಪರಿಷತ್ತಿನ ಆರು ಸದಸ್ಯ ಸ್ಥಾನಗಳಿಗೆ ನಡೆಯುತ್ತಿರುವ ದ್ವೈ ವಾರ್ಷಿಕ ಚುನಾವಣೆಗೆ 103 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು, ಒಟ್ಟು 54 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
|
3 |
+
ಮೇ 9 ರಿಂದ ನಿನ್ನೆಯವರೆಗೆ 100 ಪುರುಷರು, 100 ಮಹಿಳೆಯರು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಬಿಜೆಪಿ 5, ಕಾಂಗ್ರೆಸ್ 6, ಜೆಡಿಎಸ್ 2, ಆರ್ಯುಪಿಪಿ 7, ಪಕ್ಷೇತರರು 83 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
|
4 |
+
ಒಟ್ಟು 156 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂದು ನಾಮಪತ್ರಗಳ ಪರಿಶೀಲನೆ ನಡೆದಿದೆ. ಸಂಜೆ ವೇಳೆಗೆ ತಿರಸ್ಕೃತಗೊಂಡ ಹಾಗೂ ಒಪ್ಪಿತವಾದ ನಾಮಪತ್ರಗಳ ವಿವರವನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ.ಜೂನ್ 3 ರಂದು 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
|
5 |
+
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 29, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 24, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 5, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 12, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
|
eesanje/url_46_143_5.txt
ADDED
@@ -0,0 +1,19 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅಂಜಲಿ ಹಂತಕ ವಿಶ್ವ ಅರೆಸ್ಟ್, ರೈಲಿನಲ್ಲಿ ಮತ್ತೊಬ್ಬ ಮಹಿಳೆಯ ಕೊಲೆಗೆ ಯತ್ನಿಸಿದಾಗ ಪ್ರಯಾಣಿಕರಿಂದ ಥಳಿತ
|
2 |
+
ಹುಬ್ಬಳ್ಳಿ, ಮೇ 17-ಅಂಜಲಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಹಂತಕ ಮತ್ತೊಬ್ಬ ಮಹಿಳೆಯೊಬ್ಬರ ಕೊಲೆಗೆ ಯತ್ನಿಸಿ ಸಿಕ್ಕಿ ಬಿದ್ದಿದ್ದಾನೆ. ನಿನ್ನೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ದಾವಣಗೆರೆಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಗಲಾಟೆ ಮಾಡಿ ಅವರಿಗೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.
|
3 |
+
ತಕ್ಷಣ ಸಹ ಪ್ರಯಾಣಿಕರು ಆತನಿಗೆ ಹಿಗ್ಗಾಮುಗ್ಗ ಥಳಿಸಿದಾಗ ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳುವ ಭರದಲ್ಲಿ ಹಳಿಬಳಿ ಬಿದ್ದು ಗಾಯಗೊಂಡಿದ್ದಾನೆ.ದಾವಣಗೆರೆ ರೈಲ್ವೆ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಆತನ ಪೂರ್ವಾಪರ ವಿಚಾರಿಸುತ್ತಿದ್ದಾಗ ಈತನೇ ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ವಿಶ್ವ ಎಂಬುದು ಗೊತ್ತಾಗಿದೆ.
|
4 |
+
ತಕ್ಷಣ ಈ ವಿಷಯವನ್ನು ರೈಲ್ವೆ ಪೊಲೀಸರು ಹುಬ್ಬಳ್ಳಿ ಪೊಲೀಸರಿಗೆ ತಿಳಿಸುತ್ತಾರೆ. ರಾತ್ರಿಯೇ ಪೊಲೀಸರು ದಾವಣಗೆರೆಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಹುಬ್ಬಳ್ಳಿಗೆ ಕರೆತಂದು ಕಿಮ್ಸೌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಲಿಸಿದ್ದಾರೆ.
|
5 |
+
ಆಯುಕ್ತರ ಭೇಟಿ:ಇಂದು ಬೆಳಗ್ಗೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರು ಕಿಮ್ಸೌ ಆಸ್ಪತ್ರೆಗೆ ಭೇಟಿ ನೀಡಿ ಆರೋಪಿಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
|
6 |
+
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗಾಗಿ ಎಂಟು ತಂಡವನ್ನು ರಚನೆ ಮಾಡಿದ್ದೆವು. ನಿನ್ನೆ ರೈಲ್ವೆ ಪೊಲೀಸರ ಸಹಾಯದಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದರು.
|
7 |
+
ಆರೋಪಿ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಆತ ಸದ್ಯ ಕೋಮ ಸ್ಥಿತಿಯಲ್ಲಿದ್ದಾನೆ. ರೈಲಿನಿಂದ ಏಕೆ ಕೆಳಗೆ ಬಿದ್ದ ಎಂಬುದನ್ನು ಆತನ ಹೇಳಿಕೆ ನಂತರವಷ್ಟೇ ತಿಳಿಯಬಹುದಾಗಿದೆ ಎಂದು ಅವರು ತಿಳಿಸಿದರು.
|
8 |
+
ಮಹಾರಾಷ್ಟ್ರದಿಂದ ತಲೆಮರೆಸಿಕೊಳ್ಳಲು ಯತ್ನ:ಆರೋಪಿಯನ್ನು ಇಂದು ಬೆಳಗಿನ ಜಾವ 4.30ರ ಸುಮಾರಿಗೆ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯು ಮೈಸೂರಿನಿಂದ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಲು ಯತ್ನಿಸಿದ್ದ. ಆತನ ಮೇಲೆ ನಾಲ್ಕು ಬೈಕ್ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.
|
9 |
+
ಮೊಬೈಲ್ ಬಳಸುತ್ತಿರಲಿಲ್ಲ:ಆರೋಪಿ ವಿಶ್ವ ಮೊಬೈಲ್ ಬಳಕೆ ಮಾಡುತ್ತಿರಲಿಲ್ಲ. ಹಾಗಾಗಿ ಆತನನ್ನು ಹುಡುಕುವುದು ಪೊಲೀಸರಿಗೆ ಕಷ್ಟವಾಗಿತ್ತು.
|
10 |
+
ಪ್ರತಿಭಟನೆ ಕಾವು:ಅಂಜಲಿ ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ವಿವಿಧ ಮಠಾಧೀಶರು, ರಾಜಕೀಯ ಮುಂಡರು ಅಂಜಲಿ ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.
|
11 |
+
ಬಗೆದಷ್ಟು ಆರೋಪಿ ದುಷ್ಕೃತ್ಯ ಬಯಲು:ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಹಲವು ದುಷ್ಕೃತ್ಯಗಳು ಬಯಲಾಗುತ್ತಿವೆ.ಮದ್ಯವೆಸನಕ್ಕೆ ದಾಸನಾಗಿದ್ದ ಈತ ಹಲವು ಬಾರಿ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದನು.
|
12 |
+
ತಾಯಿ ಕಣ್ಣೀರು:ಮಗನ ಅಪರಾಧಗಳನ್ನು ನೋಡಿ ನೊಂದಿದ್ದ ಆರೋಪಿಯ ತಾಯಿ ಸವಿತಾ ಅವರು, ಪ್ರತಿನಿತ್ಯ ಕಣ್ಣೀರು ಹಾಕುತ್ತಿದ್ದರು. ಹೊಟ್ಟೆಪಾಡಿಗಾಗಿ ಹೊಟೇಲ್ನಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು.
|
13 |
+
ಮನೆ ಖಾಲಿ ಮಾಡಲು ಒತ್ತಡ:ಮತ್ತೊಂದು ಕಡೆ ಮನೆ ಮಾಲೀಕರು ಮನೆ ಖಾಲಿ ಮಾಡುವಂತೆ ಆರೋಪಿಯ ತಾಯಿಗೆ ಒತ್ತಡ ಹಾಕಿ ಮನೆಗೆ ಬೀಗ ಹಾಕಿದ್ದಾರೆ.ಆರೋಪಿ ವಿಶ್ವ ಯಾವಾಗಲಾದರೂ ಒಮೆ ಮಾತ್ರ ತಾಯಿಯನ್ನು ನೋಡಲು ಬರುತ್ತಿದ್ದ. ಈತನ ತಾಯಿಯ ಮುಖ ನೋಡಿಕೊಂಡು ಜನರು ಸುಮನಾಗುತ್ತಿದ್ದರು.ಆದರೆ ಅಂಜಲಿ ಹತ್ಯೆ ಬಳಿಕ ಇಲ್ಲಿನ ಜನರು ಆರೋಪಿಯನ್ನು ಎನ್ಕೌಂಟರ್ ಮಾಡಬೇಕೆಂದು ಆಕ್ರೋಶ ಹೊರಹಾಕಿದ್ದಾರೆ.
|
14 |
+
ವಿಶ್ವ ಅಲಿಯಾಸ್ ಗಿರೀಶ್ ಬಂಧಿತ ಆರೋಪಿ. ಈತ ಕಳ್ಳತನ ಪ್ರವೃತ್ತಿ ಬೆಳೆಸಿಕೊಂಡಿದ್ದಲ್ಲದೆ, ಅಮಾಯಕ ಯುವತಿಯರನ್ನೇ ಟಾರ್ಗೆಟ್ ಮಾಡಿ ಮೋಸ ಮಾಡುತ್ತಿದ್ದುದು ತನಿಖೆಯಿಂದ ಬೆಳಕಿಗೆ ಬಂದಿದೆ.
|
15 |
+
ಮೇ 15ರಂದು ಮುಂಜಾನೆ 5.30ರ ಸುಮಾರಿನಲ್ಲಿ ಅಂಜಲಿ ಮನೆ ಬಳಿ ಹೋಗಿ ಬಾಗಿಲು ತಟ್ಟಿದ್ದು, ಕದ ತೆಗೆಯುತ್ತಿದ್ದಂತೆಯೇ ಅಂಜಲಿ ಮೇಲೆ ಏಕಾಏಕಿ ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದನು.
|
16 |
+
ಈ ಪ್ರಕರಣ ಹುಬ್ಬಳ್ಳಿ ಜನತೆಯನ್ನು ಬೆಚ್ಚಿ ಬೀಳಿಸಿತ್ತು. ಹಂತಕನ ಪತ್ತೆಗೆ ಎರಡು ತಂಡಗಳನ್ನು ರಚಿಸಿ ಪೊಲೀಸರು ಆತನ ಬಂಧನಕ್ಕೆ ವಿವಿಧ ರಸ್ತೆಗಳಲ್ಲಿನ ಸಿಸಿ ಕ್ಯಾಮರಾ ಪರಿಶೀಲಿಸಿ ಆತನ ಬಂಧನಕ್ಕೆ ಒಂದು ತಂಡ ಮೈಸೂರಿನಲ್ಲಿ ಮತ್ತೊಂದು ತಂಡ ದಾವಣಗೆರೆಯಲ್ಲಿ ಆರೋಪಿಗಾಗಿ ಹುಡುಕಾಟ ನಡೆಸುತ್ತಾ ಹಲವು ಮಾಹಿತಿಗಳನ್ನು ಕಲೆಹಾಕಿದ್ದಾರೆ.
|
17 |
+
ದಾವಣಗೆರೆಯ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ರಾತ್ರಿ ಹಂತಕನನ್ನು ಬಂಧಿಸಿ ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ. ಆರೋಪಿಯು ಬೈಕ್ ಕಳ್ಳತನ ಪ್ರಕರಣದ ಆರೋಪಿಯಾಗಿದ್ದು, ಅಮಾಯಕ ಯುವತಿಯರ ಜೊತೆ ಪ್ರೀತಿಯ ನಾಟಕವಾಡಿ, ಅವರನ್ನು ಓಲೈಸಿಕೊಂಡು ನಂತರ ಅವರಿಂದ ಹಣ, ಬೆಳ್ಳಿ, ಬಂಗಾರ ಪಡೆದು ಮೋಸ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ.
|
18 |
+
ಆರೋಪಿಯು ಅಂಜಲಿಯನ್ನು ಅದೇ ರೀತಿ ಓಲೈಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಆಕೆ ಆತನ ಪ್ರೀತಿಯನ್ನು ಒಪ್ಪದಿದ್ದಾಗ ನೇಹಾ ರೀತಿಯಲ್ಲೇ ಕೊಲೆ ಮಾಡೊದಾಗಿ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ.
|
19 |
+
ಈ ವಿಷಯವನ್ನು ಅಂಜಲಿ ತನ್ನ ಅಜ್ಜಿಗೆ ಹೇಳಿದ್ದರು. ಅಜ್ಜಿ ಬೆಂಡಿಗೇರಿ ಪೊಲೀಸ್ ಠಾಣೆಗೆ ಹೋಗಿ ವಿಶ್ವನ ಬಗ್ಗೆ ಹೇಳಿದರೂ, ಅದನ್ನು ಗಂಭೀರವಾಗಿ ಪರಿಗಣ��ಸಿಲ್ಲ. ಆರೋಪಿ ವಿಶ್ವ ಅಪರಾಧ ಹಿನ್ನೆಲೆವುಳ್ಳವನು ಎಂದು ಗೊತ್ತಿದ್ದರೂ ಪೊಲೀಸರು ಏಕೆ ನಿರ್ಲಕ್ಷ್ಯ ತಾಳಿದರು ಎಂಬುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
|
eesanje/url_46_143_6.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಾದ್ಯಂತ ಇಂದಿನಿಂದ ಒಂದು ವಾರ ಭಾರಿ ಮಳೆ ಸಾಧ್ಯತೆ
|
2 |
+
ಬೆಂಗಳೂರು,ಮೇ 17-ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇಂದಿನಿಂದ ಒಂದು ವಾರ ಕಾಲ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ಪೂರ್ವ ಮುಂಗಾರು ಚೇತರಿಕೆ ಕಂಡಿದ್ದು, ರಾಜ್ಯಾದ್ಯಂತ ಮಳೆಯಾಗುವ ಮುನ್ಸುಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
|
3 |
+
ಇಂದಿನಿಂದ ಮೇ 21 ರವರೆಗೂ ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
|
4 |
+
ಇಂದು ಮುಂಜಾನೆ ರಾಜಧಾನಿ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ವಿಧಾನಸೌಧ, ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ಶಿವಾಜಿನಗರ, ಬಸವನಗುಡಿ, ಜಯನಗರ, ಬನಶಂಕರಿ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೆಳಿಗ್ಗೆ ಮಳೆಯಾಗಿದೆ.
|
5 |
+
ಮೇಲೈ ಸುಳಿಗಾಳಿ, ಟ್ರಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಆಗಾಗ್ಗೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
|
6 |
+
ನೈರುತ್ಯ ಮುಂಗಾರು ಸಕಾಲಕ್ಕೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಬಂಗಾಳಕೊಲ್ಲಿ, ಹಿಂದೂ ಮಹಾಸಾಗರ ಹಾಗೂ ಅರಬ್ಬೀ ಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣಗಳು ನಿರ್ಮಾಣವಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.
|
7 |
+
|
8 |
+
|
9 |
+
ಬೆಂಗಳೂರು, ಬೆಂಗಳೂರು, ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ದಾವಣಗೆರೆ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
|
10 |
+
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ದಕ್ಷಿಣ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
|
eesanje/url_46_143_7.txt
ADDED
@@ -0,0 +1,3 @@
|
|
|
|
|
|
|
|
|
1 |
+
ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು
|
2 |
+
ಬೆಂಗಳೂರು ಮೇ 16 : ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ನೀಡಿ ನ್ಯಾಯಾಲಯ ಆದೇಶಿಸಿದೆ ಜಾಮೀನು ನೀಡಬೇಕೆಂದು ಕೋರಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆನಡೆಸಿದ 42ನೇ ಎಸಿ ಎಮ್ ಎಂ ನ್ಯಾಯಾಲಯದ ನ್ಯಾಯಾಧೀಶರು ವಾದ ಪ್ರತಿವಾದಗಳನ್ನು ಆಲಿಸಿ, ನಾಳೆ ಮಧ್ಯಾಹ್ನದವರೆಗೆ ಮಧ್ಯಂತರ ಜಾಮೀನು ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಿದರು5ಲಕ್ಷ ಬಾಂಡ್ ಒದಗಿಸಬೇಕು ಸೇರಿದಂತೆ ಹಲವು ಶರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆರೇವಣ್ಣ ಅವರು ಪ್ರಭಾವಿ ರಾಜಕೀಯ ಮುಖಂಡರಾಗಿದ್ದು ಯಾವುದೇ ಕಾರಣಕ್ಕೂ ಅವರಿಗೆ ಜಾಮೀನು ನೀಡಬಾರದು. ಅವರನ್ನು ಎಸ್ಐಟಿ ವಶಕ್ಕೆ ನೀಡಬೇಕೆಂದು ಸರ್ಕಾರಿ ಪರ ವಕೀಲರಾದ ಜಾಯ್ನ ಕೊಟಾರಿಯವರು ವಾದ ಮಂಡಿಸಿದರುಈ ಪ್ರಕರಣದಲ್ಲಿ ಜಾಮೀನು ಪಡೆಯಬಹುದಾದಂತಹ ಸೆಕ್ಷನ್ಗಳನ್ನ ಹಾಕಲಾಗಿದೆ ಒಂದು ಪ್ರಕರಣದಲ್ಲಿ ಈಗಾಗಲೇ ನಮ್ಮ ಕಕ್ಷಿದಾರರು ಜಾಮೀನು ಪಡೆದಿದ್ದಾರೆ ವಿಚಾರಣೆಗೆ ಸಹಕರಿಸುತ್ತಿದ್ದಾರೆ ಅವರಿಗೆ ಜಾಮೀನು ನೀಡಬೇಕೆಂದು ರೇವಣ್ಣ ಪರ ವಕೀಲರು ಪ್ರಬಲವಾದ ಮಂಡಿಸಿದರು
|
3 |
+
ಜಾಮೀನು ನೀಡಬಹುದಾದಂತಹ ಸೆಕ್ಷನ್ಗಳನ್ನ ಹಾಕಿರುವಾಗ ಜಾಮೀನಿಗೆ ಆಕ್ಷೇಪ ಸಲ್ಲಿಸುವುದು ಸರಿಯಾದ ಕ್ರಮ ಅಲ್ಲ ಎಂದು ರೇವಣ್ಣ ಪರ ವಕೀಲರು ಹೇಳಿದರು ವಾದ ವಿವಾದವನ್ನು ಆಲಿಸಿದ ನ್ಯಾಯಾಧೀಶರು ಮಧ್ಯಂತರ ಜಾಮೀನು, ಮಂಜೂರು ಮಾಡಿದರು
|
eesanje/url_46_143_8.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಜ್ವಲ್ಗಾಗಿ ಕಾದು ಕಾದು ಸುಸ್ತಾದ ಎಸ್ಐಟಿ, ರೆಡ್ ಕಾರ್ನರ್ ನೋಟಿಸ್ ಜಾರಿಯೊಂದೇ ದಾರಿ
|
2 |
+
ಬೆಂಗಳೂರು, ಮೇ 16– ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಭಾರತಕ್ಕೆ ಈಗ ಬರುತ್ತಾರೆ…, ಆಗ ಬರುತ್ತಾರೆ ಎಂದು ಎಸ್ಐಟಿ ಕಾದು ಕಾದು ಸುಸ್ತಾಗಿದೆ.
|
3 |
+
ಕಳೆದ 20 ದಿನಗಳಿಂದ ಪ್ರಜ್ವಲ್ ರೇವಣ್ಣ ಎಸ್ಐಟಿ ಅಧಿಕಾರಿಗಳೊಂದಿಗೆ ಕಣ್ಣಾಮುಚ್ಚಾಲೆಯ ಆಟ ಆಡುತ್ತಿದ್ದಾರೆ. ಭಾರತಕ್ಕೆ ಹಿಂದಿರುಗಲು ಮೇ 3 ರಿಂದ ನಿನ್ನೆ 15ರ ವರೆಗೆ 5 ಭಾರಿ ವಿಮಾನ ಟಿಕೆಟ್ ಬುಕ್ ಆಗಿ ಕೊನೆಕ್ಷಣಗಳಲ್ಲಿ ರದ್ದಾಗಿವೆ. ಇತ್ತ ಪ್ರಜ್ವಲ್ ರೇವಣ್ಣ ಹಿಂದಿರುಗುತ್ತಾರೆ ಎಂದು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಎಸ್ಐಟಿ ಅಧಿಕಾರಿಗಳ ನಿರೀಕ್ಷೆ ಹುಸಿಯಾಗಿದೆ.
|
4 |
+
ಈಗಾಗಲೇ ಪ್ರಜ್ವಲ್ ಅವರು ವಿಚಾರಣೆಗೆ ಹಾಜರಾಗಬೇಕೆಂದು ಮೊದಲು ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ನಂತರ ಲುಕ್ಔಟ್ ನೋಟಿಸ್ ಜಾರಿ ಗೊಳಿಸಲಾಗಿತ್ತು. ಆಮೇಲೆ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು. ಈಗ ಪ್ರಜ್ವಲ್ ಅವರನ್ನು ಸ್ವದೇಶಕ್ಕೆ ಕರೆತರಲು ಇರುವ ಏಕೈಕ ಮಾರ್ಗವೆಂದರೆ ರೆಡ್ ಕಾರ್ನರ್ ನೋಟಿಸ್ ಜಾರಿ ಗೊಳಿಸುವುದು.
|
5 |
+
ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವುದು ಅಷ್ಟು ಸುಲಭವಾದ ಪ್ರಕ್ರಿಯೆಯಲ್ಲ. ಪ್ರಜ್ವಲ್ ರೇವಣ್ಣ ಬಂಧನವಾಗದ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಆಗ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ಸಮನ್್ಸ ಜಾರಿ ಮಾಡುತ್ತದೆ. ಈ ವೇಳೆ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಬಗ್ಗೆ ಎಸ್ಐಟಿ ಮಾಹಿತಿ ನೀಡುತ್ತದೆ.
|
6 |
+
ಕೋರ್ಟ್ ಸಮನ್್ಸಗೆ ಗೈರಾದರೆ ಪ್ರಜ್ವಲ್ ಪತ್ತೆಗೆ ಕೋರ್ಟ್ ಅನುಮತಿಯೊಂದಿಗೆ ರೆಡ್ ಕಾರ್ನರ್ ನೋಟಿಸ್ ಹೊರಡಿಸುವಂತೆ ಸಿಬಿಐಗೆ ಎಸ್ಐಟಿ ಮನವಿ ಮಾಡುತ್ತದೆ. ಬಳಿಕ ಸಿಬಿಐ ಇಂಟರ್ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸುತ್ತದೆ. ಈ ನೋಟಿಸ್ ಜಾರಿಯಾದರೆ ಪ್ರಜ್ವಲ್ ಯಾವ ದೇಶದಲ್ಲಿ ಇದ್ದಾರೊ ಆ ದೇಶದ ಸ್ಥಳೀಯ ಪೊಲೀಸರೇ ಅವರನ್ನು ವಶಕ್ಕೆ ಪಡೆಯಲು ಅನುಮತಿ ನೀಡುತ್ತದೆ.
|
7 |
+
ವಶಕ್ಕೆ ಪಡೆದ ನಂತರ ಆ ದೇಶದ ಪೊಲೀಸರು ಭಾರತಕ್ಕೆ ಒಪ್ಪಿಸುತ್ತಾರೆ. ಈ ಎಲ್ಲಾ ಪ್ರಕ್ರಿಯೆಗಳನ್ನು ನಡೆಸಬೇಕಾದರೇ ಎಸ್ಐಟಿಗೆ ಕನಿಷ್ಠ 40 ದಿನಗಳು ಬೇಕಾಗಬಹುದು.
|
8 |
+
ರಾಜತಾಂತ್ರಿಕ ಪಾಸ್ಪೋರ್ಟ್ ಸುಲಭವಾಗಿ ರದ್ದು ಗೊಳಿಸಲು ಸಾಧ್ಯವಿಲ್ಲ:ಸಂಸದರಾಗಿರುವ ಕಾರಣ ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ಹೋಗಿದ್ದಾರೆ. ಅವರ ರಾಜತಾಂತ್ರಿಕ ಪಾಸ್ಪೋರ್ಟ್ನ್ನು ರದ್ದು ಗೊಳಿಸಿಬೇಕೆಂಬ ಒತ್ತಾಯವೂ ಕೂಡ ಕೇಳಿಬಂದಿದೆ.
|
9 |
+
ಈ ಪಾಸ್ಪೋರ್ಟ್ ಅನ್ನು ಅಷ್ಟು ಸುಲಭವಾಗಿ ರದ್ದು ಮಾಡಲು ಸಾಧ್ಯವಿಲ್ಲ. ನ್ಯಾಯಾಲಯದಿಂದ ಆದೇಶ ಬಂದ ಬಳಿಕವಷ��ಟೇ ವಿದೇಶಾಂಗ ಸಚಿವಾಲಯ ಪಾಸ್ಪೋರ್ಟ್ಅನ್ನು ರದ್ದು ಮಾಡಬಹುದಾಗಿದೆ.ಎಸ್ಐಟಿ ತಂಡ ಪ್ರಜ್ವಲ್ ಅವರನ್ನು ಭಾರತಕ್ಕೆ ಕರೆ ತರಲು ಎಲ್ಲಾ ಮಾರ್ಗೋಪಾಯಗಳನ್ನು ಬಳಸಲು ಮುಂದಾಗಿದೆ.
|
10 |
+
ವಿದೇಶದಲ್ಲಿ ಕಳೆದ 20 ದಿನಗಳಿಂದ ತಲೆ ಮರೆಸಿಕೊಂಡಿರುವ ಪ್ರಜ್ವಲ್ ನಿನ್ನೆ ಜರ್ಮನಿಯಿಂದ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುತ್ತಾರೆ ಎಂಬ ನಿರೀಕ್ಷೆ ಹಿನ್ನೆಲೆಯಲ್ಲಿ ಎಸ್ಐಟಿ ಪೊಲೀಸರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿ, ಪ್ರಜ್ವಲ್ನನ್ನು ವಶಕ್ಕೆ ಪಡೆಯಲು ಎಲ್ಲ ಸಿದ್ಧತೆ ಕೂಡ ನಡೆಸಿದ್ದರು. ಜರ್ಮನಿಯ ಮ್ಯೂನಿಚ್ನಿಂದ ಟಿಕೆಟ್ ಬುಕ್ ಆಗಿತ್ತು. ಲುಫ್ತಾನ್್ಸ ಏರ್ಲೈನ್್ಸನಲ್ಲಿ ಮಧ್ಯರಾತ್ರಿ 12.30ರ ಸುಮಾರಿಗೆ ಪ್ರಜ್ವಲ್ ಬರುವ ಸಾಧ್ಯತೆಯಿದೆ ಎಂಬ ಹಿನ್ನೆಲೆಯಲ್ಲಿ ಕಾದು ಕುಳಿತಿದ್ದರು.
|
11 |
+
ನಂತರ ಬ್ರಿಟಿಷ್ ಏರ್ಲೈನ್್ಸನಲ್ಲಿ ಬರುವ ಮಾಹಿತಿ ತಿಳಿದು ಮುಂಜಾನೆ 5 ಗಂಟೆವರೆಗೆ ಪೊಲೀಸರು ಕಾದಿದ್ದರು. ಆದರೆ 2 ವಿಮಾನದಲ್ಲೂ ಪ್ರಜ್ವಲ್ ಬಾರದ ಕಾರಣ ಪೊಲೀಸರು ಬರಿಗೈಯಲ್ಲಿ ಹಿಂದಿರುಗಿದ್ದರು.
|
eesanje/url_46_143_9.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ಆಪರೇಷನ್ ಅಗತ್ಯವಿಲ್ಲ, ಕಾಂಗ್ರೆಸ್ ಶಾಸಕರೇ ಸಿದ್ದು ಸರ್ಕಾರವನ್ನು ಉರುಳಿಸುತ್ತಾರೆ : ಶೆಟ್ಟರ್
|
2 |
+
ಹುಬ್ಬಳ್ಳಿ, ಮೇ 16-ಸಿದ್ದರಾಮಯ್ಯ ಸರ್ಕಾರ ಉರುಳಲು ಆಪರೇಷನ್ ಕಮಲ ನಡೆಸುವ ಆವಶ್ಯಕತೆಯಿಲ್ಲ, ಅಸಮಾಧಾನದಿಂದ ಕುದಿಯುತ್ತಿರುವ ಕಾಂಗ್ರೆಸ್ ಶಾಸಕರೇ ಪತನಕ್ಕೆ ಕಾರಣರಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
|
3 |
+
ನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗದ ಕಾರಣ ಶಾಸಕರೆಲ್ಲಾ ಕೊತಕೊತ ಕುದಿಯುತ್ತಿದ್ದಾರೆ, ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಯಾವುದೇ ಕ್ಷಣದಲ್ಲಿ ಅವರ ಅಸಮಾಧಾನ ಸ್ಪೋಟಗೊಳ್ಳುವ ಸಾಧ್ಯೆತೆಯಿದೆ ಎಂದರು.
|
4 |
+
ಸಿಎಂ ಮತ್ತು ಡಿಸಿಎಂ ನಡುವೆ ಸಿಎಂ ಕುರ್ಚಿ ಗುದ್ದಾಟ ಸರ್ಕಾರ ರಚನೆಯಾಗುವ ಮೊದಲಿಂದ ನಡೆಯುತ್ತಿದೆ. ಸಿದ್ದರಾಮಯ್ಯ 5 ವರ್ಷ ಅವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆಯೇ ಅಥವಾ ಅರ್ಧ ಅವಧಿಯ ನಂತರ ನಿರ್ಗಮಿಸುತ್ತಾರೆಯೇ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಸಿಎಂ ಕುರ್ಚಿಗಾಗಿ ಡಿ.ಕೆ. ಶಿವಕುಮಾರ್ ನಡೆಸುತ್ತಿರುವ ಕಸರತ್ತು ಸಹ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ಶೆಟ್ಟರು ಹೇಳಿದರು.
|
eesanje/url_46_144_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ವಿಧಾನಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ
|
2 |
+
ಬೆಂಗಳೂರು,ಮೇ 16-ರಾಜ್ಯ ವಿಧಾನಪರಿಷತ್ನ ಆರು ಸದಸ್ಯ ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅವಧಿ ಇಂದು ಮುಕ್ತಾಯವಾಗಿದೆ. ಇದುವರೆಗೆ ಬಿಜೆಪಿ 4, ಕಾಂಗ್ರೆಸ್ 5, ಜೆಡಿಎಸ್ 1, ಪಕ್ಷೇತರ 40 ಸೇರಿದಂತೆ ಒಟ್ಟು 50 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
|
3 |
+
47 ಪುರುಷ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 68 ನಾಮಪತ್ರಗಳನ್ನು ಸಲ್ಲಿಸಲಾಗಿದೆ. ಕೊನೆಯ ದಿನವಾದ ಇಂದೂ ಕೂಡ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಹಲವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
|
4 |
+
ನಿನ್ನೆ 21 ಅಭ್ಯರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉಮೇದುವಾರಿಕೆ ಸಲ್ಲಿಸಿದ್ದರು. 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3 ರಂದು ಮತದಾನ ನಡೆಯಲಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಳೆ ಸಂಜೆ ಆಯಾ ಕ್ಷೇತ್ರಗಳಲ್ಲಿ ತಿರಸ್ಕೃತಗೊಂಡ ಹಾಗೂ ಕ್ರಮಬದ್ಧವಾದ ನಾಮಪತ್ರಗಳ ಪ್ರಕಟಣೆ ಮಾಡಲಾಗುತ್ತದೆ.
|
5 |
+
ನಾಮಪತ್ರಗಳನ್ನು ವಾಪಸ್ ಪಡೆಯಲು ಮೇ 20 ರವರೆಗೂ ಕಾಲಾವಕಾಶವಿದೆ. ಅಂದು ಸಂಜೆ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಲೋಕಸಭೆ ಚುನಾವಣೆಯಂತೆ ಮೇಲನೆ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿವೆ. ಆಡಳಿತರೂಢ ಕಾಂಗ್ರೆಸ್ ಎಲ್ಲಾ 6 ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಎನ್ಡಿಎ ಮೈತ್ರಿಕೂಟದ ವಿರುದ್ಧ ಹೋರಾಟ ನಡೆಸಲಿದೆ.
|
eesanje/url_46_144_10.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಮತ್ತೊಬ್ಬ ಯುವತಿ ಹತ್ಯೆ
|
2 |
+
ಹುಬ್ಬಳ್ಳಿ, ಮೇ 15-ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಭೀಕರ ಕೊಲೆ ನಡೆದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಇಂದು ನಸುಕಿನ ಜಾವ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
|
3 |
+
ವೀರಾಪುರ ಓಣಿ ಕರಿಯಮನ ಗುಡಿ ನಿವಾಸಿ ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾದ ಯುವತಿ. ಯಲ್ಲಾಪುರ ಓಣಿಯ ಗಿರೀಶ ಅಲಿಯಾಸ್ ವಿಶ್ವ ಎಸ್. ಸಾವಂತ ಎಂಬಾತ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿ.ಅಂಜಲಿಯು ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಗಿರೀಶ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಆಕೆಯ ಮನೆ ಬಳಿ ಹೋಗಿ ಬಾಗಿಲು ಬಡಿದಿದ್ದಾನೆ.
|
4 |
+
ಪರಿಚಯಸ್ಥರು ಬಂದಿರಬಹುದೆಂದು ತಿಳಿದು ಅಂಜಲಿಯೇ ಹೋಗಿ ಬಾಗಿಲು ತೆಗೆಯುತ್ತಿದ್ದಂತೆ ಏಕಾಏಕಿ ಆಕೆಯನ್ನು ಮನೆಯ ಒಳಗೆ ತಳ್ಳಿಕೊಂಡು ಹೋಗಿ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ಆಕೆ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಬಿಡದೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.ಆತನ ತಾಯಿ ಮನೆಗೆಲಸ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
|
5 |
+
ಸುದ್ದಿ ತಿಳಿದು ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹಂತಕನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
|
6 |
+
ಧಮ್ಕಿ ಹಾಕಿದ್ದ ಆರೋಪಿ:ಮೈಸೂರಿಗೆ ಬರದಿದ್ದರೆ ನಿನ್ನನ್ನು ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಿಗೆ ಆದ ಹಾಗೆ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಆರೋಪಿ ಗಿರೀಶ್ ಇತ್ತೀಚೆಗೆ ಅಂಜಲಿಗೆ ಧಮ್ಕಿ ಹಾಕಿದ್ದನು ಎಂಬುವುದು ಗೊತ್ತಾಗಿದೆ.
|
7 |
+
ದೂರು ಸ್ವೀಕರಿಸದ ಪೊಲೀಸರು:ಆರೋಪಿ ಗಿರೀಶ ಧಮ್ಕಿ ಹಾಕಿದ್ದ ವಿಚಾರ ತಿಳಿದು ಅಂಜಲಿ ಅವರ ಅಜ್ಜಿ ಗಂಗಮ ಪೊಲೀಸರ ಗಮನಕ್ಕೆ ತಂದಾಗ, ಇದೆಲ್ಲಾ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರ ಪರಿಣಾಮ ಇಂದು ಹುಬ್ಬಳ್ಳಿಯಲ್ಲಿ ಯುವತಿಯ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ.
|
8 |
+
ಮನೆ ಮುಂದೆ ಜಮಾಯಿಸಿರುವ ಜನರು:ಬೆಳ್ಳಂಬೆಳಗ್ಗೆಯೇ ಮನೆಗೆ ನುಗ್ಗಿ ಯುವತಿಯನ್ನು ಕೊಲೆ ಮಾಡಿರುವ ವಿಷಯ ತಿಳಿದು ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಹಳ್ಳಿಯ ಜನರು ಅಂಜಲಿ ಮನೆ ಬಳಿ ಜಮಾಯಿಸಿದ್ದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಕಾಲೇಜು ಆವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಅಂತಹದ್ದೇ ಕೃತ್ಯ ನಡೆದಿರುವುದು ಹುಬ್ಬಳ್ಳಿಯ ಜನತೆಯನ್ನು ಬೆಚ್ಚಿಬೀಳಿಸಿದೆ.
|
eesanje/url_46_144_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ತಡರಾತ್ರಿ ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ..?
|
2 |
+
ಬೆಂಗಳೂರು, ಮೇ 15-ಪೆನ್ಡ್ರೈವ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ತಡರಾತ್ರಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. ಜರ್ಮನಿಯ ಮ್ಯೂನಿಚ್ ನಗರದಿಂದ ಇಂದು ಅವರು ಪ್ರಯಾಣ ಬೆಳೆಸುವ ಸಾಧ್ಯತೆಯಿದ್ದು, ಮಧ್ಯರಾತ್ರಿ 1 ಗಂಟೆ ವೇಳೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ನಿರೀಕ್ಷೆಯಿದೆ.
|
3 |
+
ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಪ್ರಜ್ವಲ್ ಅವರ ತಂದೆ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರು ನೇರವಾಗಿ ಬಂದು ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.ಜರ್ಮನಿಯ ಮ್ಯೂನಿಚ್ ನಗರದಿಂದ ಬೆಂಗಳೂರಿಗೆ ಹೊರಡಲಿರುವ ಲುಫ್ತಾನ್ಸಾ ಏರ್ಲೈನ್್ಸಗೆ ಸೇರಿದ ವಿಮಾನದಲ್ಲಿ ಪ್ರಜ್ವಲ್ ಅವರು ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
|
4 |
+
ಹರಿಯಾಣ ರಾಜ್ಯದ ಅಕಲ್ ಟ್ರಾವೆಲ್ಸ್ ನಿಂದ ಪ್ರಜ್ವಲ್ಗೆ ಟಿಕೆಟ್ ಬುಕ್ಕಿಂಗ್ ಮಾಡಲಾಗಿದೆ.ಬಿಸಿನೆಸ್ ಕ್ಲಾಸ್ನಲ್ಲಿ ಟಿಕೆಟ್ ಬುಕ್ ಆಗಿದೆ.ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯರಾತ್ರಿ 12.30ರ ಸುಮಾರಿಗೆ ಈ ವಿಮಾನ ಆಗಮಿಸಲಿದೆ ಎಂದು ಲುಫ್ತಾನ್ಸಾ ಏರ್ಲೈನ್ಸ್ ವೆಬ್ಸೈಟ್ನಲ್ಲಿ ತಿಳಿಸಲಾಗಿದೆ.
|
5 |
+
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಈ ವಿಮಾನ ನಿಲುಗಡೆಯಾಗಲಿದೆ. ಪೆನ್ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಲೇ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದು ಸಧ್ಯ ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿದೆ.ಕಳೆದ 17 ದಿನಗಳಿಂದಲೂ ಅವರು ಭಾರತಕ್ಕೆ ಆಗ ಬರುತ್ತಾರೆ, ಈಗ ಬರುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇಂದು ಬರುವ ಸಾಧ್ಯತೆಗಳಿವೆ.
|
6 |
+
ಮೇ 1, ಮೇ 3, ಮೇ 5ರಂದು ಪ್ರಜ್ವಲ್ ರೇವಣ್ಣ ಅವರು ಭಾರತಕ್ಕೆ ಹಿಂದಿರುಗಲು ಟಿಕೆಟ್ ಬುಕ್ ಮಾಡಿ ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದರು ಎಂದು ತಿಳಿದು ಬಂದಿದೆ.ಜರ್ಮನಿಯಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಪತ್ತೆಗಾಗಿ ಎಸ್ಐಟಿ ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ.ಪ್ರಜ್ವಲ್ ರೇವಣ್ಣ ಅವರು ವಾಸಿಸುತ್ತಿರುವ ಪ್ರದೇಶ ಕುರಿತು ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ವಿದೇಶಿ ಅಧಿಕಾರಿಗಳು ಎಸ್ಐಟಿ ಅಧಿಕಾರಿಗಳಿಗೆ ತಮ ವ್ಯಾಪ್ತಿಯಲ್ಲಿ ಕೊಡಬಹುದಾದ ಕೆಲವು ಮಾಹಿತಿಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
|
eesanje/url_46_144_12.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಒಂದೇ ಒಂದು ಗುದ್ದಲಿ ಪೂಜೆ ಮಾಡಿಲ್ಲ, ಸರ್ಕಾರದ ಸಾಧನೆ ಶೂನ್ಯ : ಸುನಿಲ್ ಕುಮಾರ್
|
2 |
+
ಬೆಂಗಳೂರು,ಮೇ 15-ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಅಭಿವೃದ್ಧಿ ಕಾರ್ಯ ಶೂನ್ಯ. ನಾವೆಲ್ಲಾ ಶಾಸಕರು ಒಂದು ವರ್ಷದಿಂದ ಒಂದೇ ಒಂದು ಗುದ್ದಲಿ ಪೂಜೆ ಕೂಡ ಮಾಡಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ಕುಮಾರ್ ಇಂದಿಲ್ಲಿ ಗುಡುಗಿದ್ದಾರೆ.
|
3 |
+
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಯಾವುದೇ ಅನುದಾನ ಬಂದಿಲ್ಲ. ಯಾವ ಯೋಜನೆಗಳಿಗೆ ಎಷ್ಟು ಅನುದಾನ ನೀಡಲಾಗಿದೆ ಎಂಬುದರ ಬಗ್ಗೆ ಲೆಕ್ಕ ಬಿಡುಗಡೆ ಮಾಡಲಿ. ಈ ಸರ್ಕಾರದಿಂದ ಅನುದಾನ ಬರುವುದಿಲ್ಲ ಎಂಬ ಅಭಿಪ್ರಾಯ ಜನರಲ್ಲಿ ಕೇಂದ್ರೀಕೃತವಾಗಿದೆ. ಇಡೀ ಸಚಿವ ಸಂಪುಟವೇ ಅಸಮರ್ಥ ಸಂಪುಟವಾಗಿದೆ. ಸಚಿವರ ಮೇಲೆ ಹಿಡಿತ ಇಲ್ಲದಂತಾಗಿದೆ. ಕಾನೂನು ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಗೃಹಸಚಿವರು ಇದರಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.
|
4 |
+
ಪಿಎಲ್ಡಿ ಬ್ಯಾಂಕುಗಳಲ್ಲಿ ರೈತರಿಗೆ ಮರು ಸಾಲ ಸಿಗುತ್ತಿಲ್ಲ. ಕೃಷಿ, ಸಹಕಾರ, ಇಂಧನ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನಗರಾಭಿವೃದ್ಧಿ ಸಚಿವರಿಗೆ ಸಂಬಂಧಿಸಿದ ಯಾವುದೇ ಕೆಲಸಗಳಾಗುತ್ತಿಲ್ಲ. ಬ್ರಾಂಡ್ ಬೆಂಗಳೂರು ಈಗ ದಿಕ್ಕೆಟ್ಟ ಬೆಂಗಳೂರು ಆಗಿದೆ.
|
5 |
+
ಕರ್ನಾಟಕದಲ್ಲಿ ಆಡಳಿತವನ್ನು ಕೆಲವು ಕುಟುಂಬದ ಸದಸ್ಯರು, ಈವೆಂಟ್ ಮ್ಯಾನೇಜ್ಮೆಂಟ್ನ ಸದಸ್ಯರು ನಡೆಸುತ್ತಿದ್ದಾರೆ. ವಿಧಾನಸೌಧದ ಆಡಳಿತ ಯಾರದೋ ಮನೆಯ ಕಿಚನ್ನಲ್ಲಿ ನಡೆಯುತ್ತಿರುವಂತೆ ಭಾಸವಾಗುತ್ತಿದೆ. ಜನಪ್ರತಿನಿಧಿಗಳಿಗೆ ಅಪಮಾನವಾಗುವಂತಹ ರೀತಿ ಆಡಳಿತ ನಡೆಸುತ್ತಿದೆ. ಇದರ ವಿರುದ್ಧ ಬಿಜೆಪಿ ಜನಾಂಧೋಲನ ಆರಂಭ ಮಾಡಲಿದೆ ಎಂದರು.
|
6 |
+
ಗ್ಯಾರಂಟಿಗಳ ಗುಂಗಿನಲ್ಲಿ ಸರ್ಕಾರ ಕಾಲ ಕಳೆಯುತ್ತಿದೆ. ಅಭಿವೃದ್ಧಿಯತ್ತ ಮಾತ್ರ ಗಮನ ನೀಡುತ್ತಿಲ್ಲ. ಜನರು ನಿರೀಕ್ಷೆಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು. ರಾಜ್ಯಸರ್ಕಾರ ಪತನ ಕುರಿತು ಏಕನಾಥ ಶಿಂಧೆ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕತ್ವದಲ್ಲಿ ಗೊಂದಲ ಉಂಟಾಗಿದೆ. ಅವರದ್ದೇ ಅಸಮಾಧಾನದಿಂದ ಸರ್ಕಾರ ಪತನವಾಗಬಹುದು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಮತ್ತೆ ಸಿಎಂ ವಾರ್ ಪ್ರಾರಂಭವಾಗಿದೆ ಎಂದು ಹೇಳಿದರು.
|
eesanje/url_46_144_2.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಜೆಡಿಎಸ್-ಬಿಜೆಪಿ ಒಟ್ಟಾಗಿ ಪೆನ್ಡ್ರೈವ್ ಪ್ರಕರಣ ಮುಚ್ಚಿಹಾಕಲು ಯತ್ನ : ಪ್ರಿಯಾಂಕ್ ಖರ್ಗೆ
|
2 |
+
ಬೆಂಗಳೂರು,ಮೇ 16-ಪೆನ್ಡ್ರೈವ್ ಪ್ರಕರಣದ ಬಳಿಕವೂ ಜೆಡಿಎಸ್-ಬಿಜೆಪಿ ಮೈತ್ರಿ ವಿಧಾನಪರಿಷತ್ ಚುನಾವಣೆಯಲ್ಲೂ ಮುಂದುವರೆದಿದೆ ಎಂದರೆ ಎರಡೂ ಪಕ್ಷಗಳು ಒಟ್ಟಾಗಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಪ್ರಕರಣ ಬಯಲಿಗೆ ಬಂದಿತ್ತು. ಅನಂತರ ಬಹುಷಃ ಬಿಜೆಪಿಯವರು ಜೆಡಿಎಸ್ನಿಂದ ಅಂತರ ಕಾಯ್ದುಕೊಳ್ಳಬಹುದು ಎಂಬ ಲೆಕ್ಕಾಚಾರಗಳಿದ್ದವು. ಆದರೆ ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಮುಂದುವರೆದಿದೆ. ಬಿಜೆಪಿ, ಜೆಡಿಎಸ್ಗೆ ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಇದರರ್ಥ ಬಿಜೆಪಿಗೆ ಅಧಿಕಾರ ಮುಖ್ಯವೇ ಹೊರತು ಯಾರು ಎಷ್ಟೇ ದೊಡ್ಡ ಅಪರಾಧ ಮಾಡಿದರೂ ಅದು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದರು.
|
4 |
+
ಪ್ರತಿಬಾರಿಯೂ ಸಿಬಿಐ ತನಿಖೆಗೆ ಕೇಳುತ್ತಾರೆ. ಯಾವ ಕಾರಣಕ್ಕಾಗಿ ಸಿಬಿಐ ತನಿಖೆ ಬೇಕು? ಈ ಹಿಂದೆ ಅಕ್ರಮ ಗಣಿಗಾರಿಕೆ, ಪರೇಷ್ಮೆಹೇಸ್ತ ಹಾಗೂ ಡಿವೈಎಸ್ಪಿ ಗಣಪತಿ ಪ್ರಕರಣಗಳಲ್ಲಿ ಸಿಬಿಐ ಯಾವ ಸಾಧನೆ ಮಾಡಿದೆ? ನಮ್ಮ ಪೊಲೀಸರ ತನಿಖಾ ವರದಿಯನ್ನು ಅನುಮೋದಿಸಿದ್ದು ಬಿಟ್ಟರೆ ಬೇರೆ ಯಾವ ಪ್ರಗತಿಯೂ ಇಲ್ಲ. ಜೆಡಿಎಸ್-ಬಿಜೆಪಿಯವರ ಉದ್ದೇಶ ಅಮಿತ್ ಷಾ ಅವರ ಕೈಕಾಲಿಗೆ ಬಿದ್ದು ಪ್ರಕರಣವನ್ನು ಮುಚ್ಚಿಹಾಕಿಸುವುದು. ಅದಕ್ಕಾಗಿಯೇ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
|
5 |
+
ಪ್ರತಿಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಪರಮೇಶ್ವರ್ ಅವರ ರಾಜೀನಾಮೆ ಕೇಳುತ್ತಿದ್ದಾರೆ. ನಮ ಮನೆಯ ಮಗ ತಪ್ಪು ಮಾಡಿದ್ದಾನೆ ಎಂದು ಜೆಡಿಎಸ್ ನಾಯಕರೇ ಒಪ್ಪಿಕೊಂಡಿದ್ದಾರೆ. ಹಾಗಿದ್ದ ಮೇಲೆ ಕಾಂಗ್ರೆಸ್ನವರು ಏಕೆ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನಿಸಿದರು.
|
6 |
+
ಪ್ರಕರಣದ ನೈತಿಕತೆ ಹೊತ್ತು ಪ್ರಜ್ವಲ್ ರೇವಣ್ಣ ಅವರ ಕುಟುಂಬದ ಸದಸ್ಯರು ತಮ ಹುದ್ದೆಗಳಿಗೆ ರಾಜೀನಾಮೆ ಕೊಡಬೇಕೆಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.ಹುಬ್ಬಳ್ಳಿಯ ನೇಹಾ ಪ್ರಕರಣದಲ್ಲಿ ತೀವ್ರ ಪ್ರತಿಭಟನೆ ನಡೆಸಿದ ಬಿಜೆಪಿಯವರು ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ತಟಸ್ಥರಾಗಿರುವುದೇಕೆ? ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲಿ ನಾಪತ್ತೆಯಾಗಿದ್ದಾರೆ? ಹಾಸನಕ್ಕೆ ಹೋಗಿ ಏಕೆ ಸಂತ್ರಸ್ತರಿಗೆ ಸಾಂತ್ವಾನ ಹೇಳುತ್ತಿಲ್ಲ. ಅಲ್ಲಿನ ಜನ ಕಲ್ಲಿನಲ್ಲಿ ಹೊಡೆಯುತ್ತಾರೆ ಎಂಬ ಭಯವೇ? ಎಂದು ಪ್ರಶ್ನಿಸಿದರು.
|
7 |
+
ರಾಜಕೀಯ ಲಾಭವಾಗದೇ ಇದ್ದರೆ ಬಿಜೆಪಿಯವರು ಸಂತ್ರಸ್ತೆಯರ ವಿಚಾರದಲ್ಲಿ ಕಾಳಜಿ ವಹಿಸುವುದಿಲ್ಲ. ಕೊಡಗಿನಲ್ಲಿ ವಿದ್ಯಾರ್ಥಿನಿ ಕೊಲೆ, ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ಬಿಜೆಪಿಯವರು ಉಸಿರು ಬಿಡುತ್ತಿಲ್ಲ. ಅದೇ ಹುಬ್ಬಳ್ಳಿ ಪ್ರಕರಣದಲ್ಲಿ ಅಮಿತ್ ಷಾ ಇಂದ ಹಿಡಿದು ಎಲ್ಲಾ ಬಿಜೆಪಿ ನಾಯಕರೂ ಸಂತ್ರಸ್ತೆಯರ ಮನೆಗೆ ಭೇಟಿ ನೀಡಿದ್ದರು. ಕೊಡಗು ಪ್ರಕರಣದಲ್ಲಿ ವೈಯಕ್ತಿಕ ಎಂದವರು, ನೇಹಾ ಪ್ರಕರಣದಲ್ಲಿ ವಿಶೇಷ ಆಸಕ್ತಿ ತೋರಿಸಿದರು. ಇದರರ್ಥ ಅವರ ರಾಜಕೀಯ ಲಾಭವೇ ಹೊರತು ಜನಪರ ಕಾಳಜಿ ಅಲ್ಲ ಎಂದು ವಾಗ್ದಾಳಿ ನಡೆಸಿದರು.
|
8 |
+
ಕೇಂದ್ರ ಸರ್ಕಾರ ಆರೋಪಿ ಪ್ರಜ್ವಲ್ ಬಂಧನಕ್ಕೆ ಯಾವುದೇ ಸಹಕಾರ ನೀಡುತ್ತಿಲ್ಲ. ಬ್ಲೂ ಕಾರ್ನರ್ ನೋಟೀಸ್ ಜಾರಿಯಾಗಿದ್ದು, ಕೇಂದ್ರ ಸರ್ಕಾರ ಇಂಟರ್ಪೋಲ್ಗೆ ಪತ್ರ ಬರೆದಿಲ್ಲ ಎಂದರು.
|
eesanje/url_46_144_3.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ದೂರು ಕೊಟ್ಟಾಗಲೇ ರಕ್ಷಣೆ ಕೊಟ್ಟಿದ್ದರೆ ನಮ್ಮಕ್ಕ ಕೊಲೆ ಆಗ್ತಿರ್ಲಿಲ್ಲ : ಅಂಜಲಿ ಸಹೋದರಿ ಆಕ್ರೋಶ
|
2 |
+
ಹುಬ್ಬಳ್ಳಿ,ಮೇ 16-ಪೊಲೀಸ್ನವರು ಹಣ ಕೊಟ್ಟವರನ್ನು ನೋಡುತ್ತಾರೆ, ಹತ್ತು, ಇಪ್ಪತ್ತು ಸಾವಿರ ಕೊಟ್ಟರೆ ಬಿಟ್ಟು ಬಿಡುತ್ತಾರೆ, ಹೆಣ್ಣಿಗೆ ನ್ಯಾಯ ಎಲ್ಲಿದೆ? ಎಂದು ಹುಬ್ಬಳ್ಳಿಯಲ್ಲಿ ಕೊಲೆಯಾದ ಅಂಜಲಿ ಅವರ ಸಹೋದರಿ ಯಶೋಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಮ್ಮ ಅಕ್ಕನ ಸಾವಿಗೆ ನ್ಯಾಯ ಸಿಗಬೇಕು, ಕೊಲೆ ಆರೋಪಿಯನ್ನು ಬಂಧಿಸಿ ಹುಬ್ಬಳ್ಳಿಯ ಚನ್ನಮ್ಮನ ವೃತ್ತದಲ್ಲಿಯೇ ಹೊಡೆದು ಹಾಕಬೇಕು. ಪೊಲೀಸರಿಗೆ ಸಾಧ್ಯವಾಗದೇ ಇದ್ದರೆ ನಮ ಕೈಗೆ ಕೊಡಿ. ನಾವೇ ಕ್ರಮ ತೆಗೆದುಕೊಳ್ಳುತ್ತೇವೆ. ಅನಂತರ ಕೇಸು ಹಾಕಿ ನಮ್ಮನ್ನೂ ಜೈಲಿಗೆ ಕಳುಹಿಸಿ, ಜೀವನ ಹಾಳಾದರೂ ಚಿಂತೆಯಿಲ್ಲ ಎಂದು ಕಿಡಿಕಾರಿದ್ದಾರೆ.
|
4 |
+
ನಮ್ಮ ಅಕ್ಕನಿಗೆ ತೊಂದರೆಯಾಗುತ್ತಿದೆ ಎಂದು ದೂರು ಕೊಟ್ಟಾಗ ಅದನ್ನು ಮೂಢನಂಬಿಕೆ ಎಂದು ತಳ್ಳಿ ಹಾಕಿದ್ದರು. ಈಗ ನಮ ಅಕ್ಕನ ಕೊಲೆಯಾಗಿದೆ. ಈಗ ಯಾರ್ಯಾರೋ ಬರುತ್ತಿದ್ದಾರೆ, ಒಂದು ಲಕ್ಷ, ಎರಡು ಲಕ್ಷ ಹಣ ಕೊಡುತ್ತಿದ್ದಾರೆ, ನಮ್ಮಕ್ಕ ಬಂಗಾರ. ಆಕೆಯನ್ನೇ ಕಳೆದುಕೊಂಡಿದ್ದೇವೆ, ಇವರ ಹಣ ತೆಗೆದುಕೊಂಡು ನಾವು ಏನು ಮಾಡೋಣ? ನಾವು ದುಡಿದು ತಿನ್ನುತ್ತೇವೆ. ನಿಮ ಹಣ ಬೇಡ. ನಮ್ಮಕ್ಕನ ಸಾವಿಗೆ ನ್ಯಾಯ ಕೊಡಿ ಎಂದು ಮನವಿ ಮಾಡಿದರು.
|
5 |
+
ಒಂದು ವೇಳೆ ನಮಕ್ಕನ ಸಾವಿಗೆ ನ್ಯಾಯ ದೊರೆಯದೇ ಇದ್ದರೆ ನಮ್ಮ ಮನೆಯ ನಾಲ್ಕೂ ಮಂದಿ ವಿಷ ಸೇವಿಸಿ ಆತಹತ್ಯೆ ಮಾಡಿಕೊಳ್ಳುತ್ತೇವೆ. ಆಗಲಾದರೂ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರಾ? ನೋಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
6 |
+
ಈಗ ಮನೆಯಲ್ಲಿ ಕೊಲೆಯಾಗಿದೆ. ನಾಳೆ ರಸ್ತೆಯಲ್ಲಿ, ಹಾದಿಬೀದಿಯಲ್ಲಿ ಕೊಲೆಯಾಗುತ್ತದೆ. ಅಲ್ಲಿಯವರೆಗೂ ಕಾದು ನೋಡುತ್ತಿರುತ್ತಾರೆಯೇ? ಈಗಾಗಲೇ ಅಂಜಲಿ ಮತ್ತು ನೇಹಾ ಎಂಬ ಇಬ್ಬರು ಸಹೋದರಿಯರನ್ನು ಕಳೆದುಕೊಂಡಿದ್ದೇವೆ. ಕೊಲೆ ಮಾಡಿದವರಿಗೆ ಅದೇ ರೀತಿಯ ಶಿಕ್ಷೆ ಕೊಡಬೇಕು ಎಂದು ಒತ್ತಾಯಿಸಿದರು.
|
7 |
+
ನಮ್ಮಕ್ಕನ ರಕ್ಷಣೆಗಾಗಿ ದೂರು ಕೊಟ್ಟಾಗಲೇ ಕ್ರಮ ಕೈಗೊಂಡಿದ್ದರೆ ಕೊಲೆಯಾಗುತ್ತಿರಲಿಲ್ಲ. ಮೂಢನಂಬಿಕೆಯೆಂದು ದೂರನ್ನು ತಳ್ಳಿ ಹಾಕಿದವರ ಮನೆಯಲ್ಲಿ ಹೆಣ್ಣು ಮಕ್ಕಳಿಲ್ಲವೇ? ಈಗ ನಮ ಅಕ್ಕನನ್ನು ಇವರು ವಾಪಸ್ ತಂದುಕೊಡುತ್ತಾರೆಯೇ? ಎಂದು ಯಶೋಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಂಜಲಿ ಕೊಲೆಯನ್ನು ಸಹೋದರಿ ಖುದ್ದು ತನ್ನ ಕಣ್ಣಾರೆ ನೋಡಿದ್ದಾಗಿ ಹೇಳುತ್ತಿದ್ದಾರೆ.
|
eesanje/url_46_144_4.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವರ್ಗಾವಣೆ ದಂಧೆ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್, ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರ: ಬಿಜೆಪಿ ವಾಗ್ದಾಳಿ
|
2 |
+
ಬೆಂಗಳೂರು,ಮೇ 16-ಇಲಾಖೆಯಲ್ಲಿನ ವರ್ಗಾವಣೆಗೆ ಪ್ರತಿಯೊಂದು ಹುದ್ದೆಗೂ ದರ ನಿಗದಿಪಡಿಸಲಾಗಿದ್ದು, ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಶಾಸಕ ಪಿ.ರಾಜೀವ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
|
3 |
+
ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಇಲಾಖೆಯಲ್ಲಿನ ಆಯಕಟ್ಟಿನ ಹುದ್ದೆಗಳಿಗೆ ಇಂತಿಷ್ಟು ಹಣ ನೀಡಿದರೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಪ್ರತಿ ಇಲಾಖೆಯಲ್ಲೂ ಒಂದೊಂದು ಹುದ್ದೆಗೆ ಇಂತಿಷ್ಟು ಎಂದು ದರ ನಿಗದಿಪಡಿಸಲಾಗಿದೆ ಎಂದು ಕಿಡಿಕಾರಿದರು.
|
4 |
+
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಸಮಾಜಘಾತುಕ ಶಕ್ತಿಗಳು, ಮೂಲಭೂತವಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸಿರುವ ಸರ್ಕಾರ ಜನಸಾಮಾನ್ಯರಿಗೆ ರಕ್ಷಣೆ ಕೊಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಿಡಿಕಾರಿದರು.
|
5 |
+
ಒಂದು ವರ್ಷದಲ್ಲಿ ಕೊಲೆ, ಸುಲಿಗೆ, ಮತಾಂತರ ತುಷ್ಟೀಕರಣದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶೂನ್ಯ ಅಭಿವೃದ್ಧಿ ಮತ್ತು ಅಸಮರ್ಥ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಕಾಂಗ್ರೆಸ್ನ ಸಾಧನೆ ಎಂದು ವ್ಯಂಗ್ಯವಾಡಿದರು.
|
6 |
+
ಆಡಳಿತ ನಡೆಸಲು ಸರ್ಕಾರ ವಿಫಲವಾಗಿದೆ. ಜನರು ಏಕಾದರೂ ಇಂತಹ ಪಕ್ಷವನ್ನು ಅಧಿಕಾರಕ್ಕೆ ತಂದೆವೋ ಎಂದು ಹಿಡಿಶಾಪ ಹಾಕುತ್ತಿದ್ದಾರೆ. ರಾಷ್ಟ್ರೀಯ ಅಪರಾಧ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಶೇ. 60 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದರು.
|
7 |
+
ಹುಬ್ಬಳ್ಳಿಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ಎರಡು ಕಗ್ಗೊಲೆಗಳಾಗಿವೆ. ನೇಹಾ ಹತ್ಯೆ ಬಳಿಕ ಇದೀಗ ಅಂಜಲಿ ಕೊಲೆಯಾಗಿದೆ. ಈ ಬಂಡ ಸರ್ಕಾರದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಇಲ್ಲವಾಗಿದೆ. ಕೊಲೆ, ಸುಲಿಗೆ ವಸೂಲಿ ನಿರಂತರವಾಗಿ ನಡೆಯುತ್ತಿವೆ. ಒಂದು ರೀತಿ ಬಂಡ ರೀತಿಯಲ್ಲಿ ಸರ್ಕಾರ ವರ್ತನೆ ಮಾಡುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.
|
8 |
+
ಯಾವಾಗ ಏನು ಆಗುತ್ತದೆ ಎಂದು ಜನರು ಭಯಭೀತರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಗೃಹ ಇಲಾಖೆ ನಿರ್ವಹಣೆ ಮಾಡುವಲ್ಲಿ ಸಚಿವ ಡಾ.ಜಿ.ಪರಮೇಶ್ವರ್ ವಿಫಲರಾಗಿದ್ದಾರೆ. ತಕ್ಷಣವೇ ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ತಾಕೀತು ಮಾಡಿದ್ದಾರೆ.
|
9 |
+
ಪೆನ್ಡ್ರೈವ್ ಪ್ರಕರಣವನ್ನು ಉದ್ದೇಶಪೂರಕವಾಗಿಯೇ ಮುಚ್ಚಿ ಹಾಕಲು ಸರ್ಕ���ರ ಸಂಚು ರೂಪಿಸಿದೆ. ಮೊದಲು ಎಫ್ಐಆರ್ ಆದಾಗಲೂ ಪ್ರಜ್ವಲ್ ರೇವಣ್ಣ ಅವರನ್ನು ಏಕೆ ಬಂಧಿಸಲಿಲ್ಲ. ನಿಮಗೆ ನಿಜವಾಗಿಯೂ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದಿದ್ದರೆ ನಿಸ್ಪಕ್ಷಪಾತ ತನಿಖೆ ನಡೆಸಬೇಕಿತ್ತು. ಎಸ್ಐಟಿ ರಚನೆಯಾಗುತ್ತಿದ್ದಂತೆ ಹೊರದೇಶಕ್ಕೆ ಹೋಗಬಹುದೆಂಬ ಸೂಕ್ಷ್ಮತೆ ಗುಪ್ತಚರ ಇಲಾಖೆಗೆ ಇರಲಿಲ್ಲವೇ? ಎಂದು ಪ್ರಶ್ನಿಸಿದರು.
|
10 |
+
ಪ್ರಜ್ವಲ್ ರೇವಣ್ಣ ಅವರನ್ನು ಹೊರದೇಶಕ್ಕೆ ಕಳುಹಿಸಿಕೊಡಲು ಸರ್ಕಾರವೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿತ್ತು. ಈಗ ರಾಜಕೀಯವಾಗಿ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಗಿದ ಮೇಲೆ ಈ ಪ್ರಕರಣದ ಬಗ್ಗೆ ಯಾರಿಗೂ ಗಂಭೀರತೆ ಇಲ್ಲ ಎಂದು ಹೇಳಿದರು.
|
11 |
+
ಪಕ್ಷದ ಪ್ರಧಾನ ಕಾರ್ಯದರ್ಶಿ ಪಿ.ರಾಜು ಮಾತನಾಡಿ, ಸರ್ಕಾರಕ್ಕೆ ಜೀವ ಇದೆಯೇ? ಅಥವಾ ಸತ್ತು ಹೋಗಿದೆಯೇ? ಮಹಿಳೆಯರು, ದಲಿತರು, ಅಮಾಯಕರ ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ರಾಜ್ಯಪಾಲರು ವಜಾ ಮಾಡಬೇಕೆಂದು ಆಗ್ರಹಿಸಿದರು.
|
12 |
+
ಜನರ ರಕ್ಷಣೆ, ಆಸ್ತಿಪಾಸ್ತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಶಾಂತಿಯ ಬೀಡಾಗಿದ್ದ ಕರ್ನಾಟಕ ಇಂದು ಕೊಲೆಗಡುಕರ ತಾಣವಾಗಿದೆ. ಪ್ರಮುಖ ಆರೋಪಿಗಳನ್ನು ಬಿಟ್ಟು ಅಮಾಯಕರ ಮೇಲೆ ದೂರು ದಾಖಲಿಸಲಾಗುತ್ತದೆ. ವಿದ್ಯಾರ್ಥಿನಿ ಅಂಜಲಿ ಕೊಲೆಗೂ ಮುನ್ನ ನಿನ್ನನ್ನು ನೇಹಾ ರೀತಿಯಲ್ಲಿ ಕೊಲೆ ಮಾಡುತ್ತೇನೆಂದು ಆರೋಪಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಅವಳಿಗೆ ಸಂಬಂಧಪಟ್ಟವರು ದೂರು ಕೊಟ್ಟಿದ್ದರೂ ಇದನ್ನು ಪೊಲೀಸರು ಮೂಢನಂಬಿಕೆ ಎಂದು ಹೇಳಿದ್ದಾರೆ. ಮೊದಲು ಈ ಅಧಿಕಾರಿಗಳನ್ನು ಸೇವೆಯಿಂದಲೇ ಶಾಶ್ವತವಾಗಿ ವಜಾಗೊಳಿಸಬೇಕೆಂದು ಒತ್ತಾಯ ಮಾಡಿದರು.
|
eesanje/url_46_144_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಎಕ್ಸ್ ಖಾತೆಯ ಬ್ಲೂ ಟಿಕ್ ಮಾರ್ಕ್ ಕಳೆದುಕೊಂಡ ಪ್ರಜ್ವಲ್ ರೇವಣ್ಣ
|
2 |
+
ಬೆಂಗಳೂರು,ಮೇ 16-ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿನ ಬ್ಲೂ ಟಿಕ್ ಮಾರ್ಕ್ ಕಳೆದುಕೊಂಡಿದ್ದಾರೆ.
|
3 |
+
ವೆರಿಫೈಡ್ ಅಕೌಂಟ್ ಎಂದು ಬಳಕೆದಾರರಿಗೆ ಕಂಪೆನಿಯು ಬ್ಲೂ ಟಿಕ್ ನೀಡುತ್ತದೆ. ಕೆಲವು ದಿನಗಳ ಹಿಂದಷ್ಟೇ ಇದ್ದ ಬ್ಲೂ ಟಿಕ್ ಮಾರ್ಕ್ ಇದೀಗ ಪ್ರಜ್ವಲ್ ಖಾತೆಯಲ್ಲಿ ಕಾಣಿಸುತ್ತಿಲ್ಲ.ವೆರಿೈಡ್ ಅಕೌಂಟ್ ಸ್ಟೇಟಸ್ನಿಂದ ಪ್ರಜ್ವಲ್ ಖಾತೆ ಹೊರಬಿದ್ದಿದ್ದು, ಎಕ್ಸ್ ಕಂಪೆನಿಯು ಅಧಿಕೃತ ಖಾತೆಯನ್ನು ಅಮಾನ್ಯ ಮಾಡಲು ಯಾವುದೇ ಕಾರಣ ನೀಡಿಲ್ಲ.
|
4 |
+
ಎಕ್ಸ್ ಗಿಂತ ಮುಂಚೆ ಟ್ವಿಟರ್ ಖಾತೆ ಬಳಸುವಾಗ ಅಧಿಕೃತ ಹಾಗೂ ಗಣ್ಯ ವ್ಯಕ್ತಿಗಳಿಗೆ ಬ್ಲೂ ಟಿಕ್ ಮಾರ್ಕ್ ನೀಡಲಾಗುತ್ತಿತ್ತು. ಇದೇ ಮಾದರಿಯಲ್ಲಿ ಪ್ರಜ್ವಲ್ ರೇವಣ್ಣಗೂ ನೀಡಿತ್ತು. ಇದೀಗ ಕಾರಣ ನೀಡದೆ ರದ್ದು ಮಾಡಲಾಗಿದೆ.
|
5 |
+
ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ಕಂಪೆನಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ಹಲವು ಬದಲಾವಣೆ ತಂದಿದ್ದಾರೆ. ಟ್ವಿಟರ್ಬದಲಿಗೆ ಎಕ್್ಸ ಎಂದು ನಾಮಕರಣ ಮಾಡಿ, ಬಳಕೆದಾರರು ಬ್ಲೂ ಟಿಕ್ ಪಡೆಯಬೇಕಾದರೆ ಚಂದಾದಾರರಾಗುವ ಪದ್ಧತಿ ಜಾರಿಗೊಳಿಸಿದ್ದರು. ಗ್ರಾಹಕರು ಹಣ ನೀಡಿ ಬ್ಲೂ ಟಿಕ್ ಮಾರ್ಕ್ ಪಡೆಯಬಹುದು. ತಿಂಗಳಿಗೆ ನಿಗದಿತ ಪ್ರಮಾಣದಲ್ಲಿ ಹಣ ನೀಡಬೇಕಿದೆ.
|
6 |
+
ಪ್ರಜ್ವಲ್ ಪ್ರಕರಣದಲ್ಲಿ ಬ್ಲೂ ಟಿಕ್ ಮಾರ್ಕ್ ಪಡೆಯಲು ಹಣ ಪಾವತಿಸಿಲ್ಲವೋ ಅಥವಾ ಅವರ ಮೇಲೆ ಇತ್ತೀಚೆಗೆ ಕೇಳಿಬಂದ ಆರೋಪಗಳ ಬಳಿಕ ಸ್ವಯಂಪ್ರೀರಿತವಾಗಿ ಬ್ಲೂ ಟಿಕ್ ಕಳೆದುಕೊಂಡಿದ್ದಾರೋ ಎಂಬುದರ ಬಗ್ಗೆ ತಿಳಿದುಬಂದಿಲ್ಲ.
|
eesanje/url_46_144_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮುಂದುವರೆಯಲಿದೆ ಮಳೆ
|
2 |
+
ಬೆಂಗಳೂರು,ಮೇ 16-ನೈರುತ್ಯ ಮುಂಗಾರು ಪ್ರಾರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯಲಿದೆ. ಮೇಲೈ ಸುಳಿಗಾಳಿ, ಟ್ರಫ್ ಹಾಗೂ ಬಂಗಾಳಕೊಲ್ಲಿ, ಹಿಂದೂ ಮಹಾಸಾಗರ, ಅರಬ್ಬೀಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣ ನಿರ್ಮಾಣಗೊಳ್ಳುತ್ತಿದೆ. ಇದರಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಹಗುರ ಇಲ್ಲವೇ ತುಂತುರು ಮಳೆ ಆಗಾಗ್ಗೆ ಬೀಳುವ ಸಾಧ್ಯತೆಗಳಿವೆ.
|
3 |
+
ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.ಭಾರತೀಯ ಹವಾಮಾನ ಇಲಾಖೆ ಈ ಬಾರಿಯ ಮುಂಗಾರು ಸಕಾಲಕ್ಕೆ ಆಗಮಿಸಲಿದೆ ಎಂಬ ಮುನ್ಸೂಚನೆ ನೀಡಿದೆ. ಮೇ ಅಂತ್ಯ ಇಲ್ಲವೇ ಜೂನ್ 1 ರಂದು ಮುಂಗಾರು ಮಳೆ ಕೇರಳ, ಕರಾವಳಿ ಪ್ರವೇಶಿಸುವ ಸಾಧ್ಯತೆಯಿದ್ದು, ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವ ಸಾಧ್ಯತೆಯಿದೆ.
|
4 |
+
ಇದುವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದಲ್ಲಿ ಒಟ್ಟಾರೆ ವಾಡಿಕೆ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ವರ್ಷ ವಾಡಿಕೆಗಿಂತ ಶೇ.24 ರಷ್ಟು ಮಳೆ ಕೊರತೆ ಉಂಟಾಗಿದ್ದು, ಇದರಿಂದ ರಾಜ್ಯದಲ್ಲಿ ತೀವ್ರ ಬರದ ಛಾಯೆ ಆವರಿಸಿತ್ತು. ಪೂರ್ವ ಮುಂಗಾರು ಕೂಡ ಮಾರ್ಚ್, ಏಪ್ರಿಲ್ನಲ್ಲಿ ಕೈಕೊಟ್ಟಿದ್ದು, ಜನರು ಕಂಗಾಲಾಗುವಂತೆ ಮಾಡಿತ್ತು.
|
5 |
+
ಮೇನಲ್ಲಿ ಪೂರ್ವ ಮುಂಗಾರು ಮಳೆ ಅಲ್ಲಲ್ಲಿ ಬೀಳುತ್ತಿದ್ದು, ಆಶಾಭಾವನೆ ಮೂಡಿಸಿದೆ. ಇದರ ಬೆನ್ನಲ್ಲೇ ಸಕಾಲಕ್ಕೆ ಮುಂಗಾರು ಆಗಮನವಾಗಿ ವಾಡಿಕೆ ಪ್ರಮಾಣದ ಮಳೆಯಾಗಲಿದೆ ಎಂಬ ಮುನ್ಸೂಚನೆ ದೊರೆತಿರುವುದು ಜನರಲ್ಲಿನ ಆತಂಕ ದೂರ ಮಾಡಿದಂತಾಗಿದೆ.
|
6 |
+
ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿದ್ಯುತ್ ಕಂಬ, ಬಾಳೆ, ತೆಂಗು, ಮಾವು ಮೊದಲಾದ ಬೆಳೆಗಳಿಗೆ ಹಾನಿಯಾದ ವರದಿಯಾಗಿದೆ.ಹವಾ ಮುನ್ಸೂಚನೆ ಪ್ರಕಾರ, ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
|
eesanje/url_46_144_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರೌಢಶಾಲೆ ಶಿಕ್ಷಕರಿಗೆ ಸರ್ಕಾರದಿಂದ ಸಿಹಿಸುದ್ದಿ
|
2 |
+
ಬೆಂಗಳೂರು,ಮೇ 16-ಕರ್ನಾಟಕದ ಪ್ರೌಢಶಾಲೆಗಳ ಶಿಕ್ಷಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಬೇಸಿಗೆ ರಜೆ ಕೆಲವು ದಿನಗಳನ್ನು ತ್ಯಾಗ ಮಾಡಿ ಶಾಲೆಗಳಿಗೆ ಆಗಮಿಸುವ ಶಿಕ್ಷಕರಿಗೆ ಗಳಿಕೆ ರಜೆಯನ್ನು ಪಡೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
|
3 |
+
ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆ-2ರ ವೇಳಾಪಟ್ಟಿ ಘೋಷಿಸಲಾಗಿದೆ. ಜೂನ್ನಲ್ಲಿ ನಡೆಯುಲಿರುವ ಈ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ವಿಶೇಷ ಬೋಧನಾ ಪರಿಹಾರ ತರಗತಿಗಳನ್ನು ನಡೆಸಬೇಕಿದೆ. ಇದಕ್ಕಾಗಿ ಶಿಕ್ಷಕರು ಬೇಸಿಗೆಯನ್ನು ಬಿಟ್ಟು ಬರಬೇಕಿದೆ.
|
4 |
+
ಸರ್ಕಾರದ ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ, ಮೇ 29ರ ತನಕ ಶಾಲೆಗಳಿಗೆ ಬೇಸಿಗೆ ರಜೆ ಇದೆ. ಆದರೆ ಶಿಕ್ಷಕರು ಶಾಲೆಗಳಿಗೆ ಮೇ 15ರಿಂದಲೇ ಆಗಮಿಸುತ್ತಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ-2ಕ್ಕೆ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಬೇಸಿಗೆ ರಜೆ ಕಡಿತ ಮಾಡಿರುವುದಕ್ಕೆ ಶಿಕ್ಷಕರು ಆಕೋಶ ವ್ಯಕ್ತಪಡಿಸಿದ್ದರು.
|
5 |
+
ಎಸ್ಎಸ್ಎಲ್ಸಿ ಪರೀಕ್ಷೆ-2 ಎಂದರೆ 2024ರ ಎಸ್ಎಸ್ಎಲ್ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ ಮತ್ತು ಪೂರ್ಣಗೊಳಿಸಲು ಆಗಿಲ್ಲದ ಹಾಗೂ ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಜೂನ್ನಲ್ಲಿ ನಡೆಸುವ ಪರೀಕ್ಷೆ.ಈ ಪರೀಕ್ಷೆಗೆ ಹೆಸರು ನೋಂದಣಿ ಮಾಡಿರುವ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ವಿಶೇಷ ಬೋಧನಾ ಪರಿಹಾರ ತರಗತಿಗಳನ್ನು ನಡೆಸಲಾಗುತ್ತದೆ. ಇದಕ್ಕಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ಕಡಿತವಾಗುವ ಬೇಸಿಗೆ ರಜೆ ದಿನಗಳ ಬದಲಿಗೆ ಗಳಿಕೆ ರಜೆಯನ್ನು ನೀಡಲಾಗುತ್ತದೆ.
|
6 |
+
14 ದಿನಗಳ ಬೇಸಿಗೆ ರಜೆ ಕಡಿತಗೊಳ್ಳುವ ಹಿನ್ನಲೆಯಲ್ಲಿ ಶಿಕ್ಷಕರು ವಿಶೇಷ ಬೋಧನಾ ಪರಿಹಾರ ತರಗತಿಗಳಿಗೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಗಳಿಕೆ ರಜೆಯನ್ನು ನೀಡಿ ಸರ್ಕಾರ ಶಿಕ್ಷಕರ ಮನವೊಲಿಕೆ ಮಾಡಿದೆ. ಮೇ 15ರಿಂದಲೇ ಕೆಲವು ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ಆರಂಭಿಸಲಾಗಿದೆ. ಒಂದು ಶಾಲೆಯಲ್ಲಿ ಎಸ್ಎಸ್ಎಲ್ಸಿ ಅನುತ್ತೀರ್ಣಗೊಂಡ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 10ಕ್ಕಿಂತ ಕಡಿಮೆ ಇದ್ದರೆ ಸಮೀಪದ ಶಾಲೆಯಲ್ಲಿ ತರಗತಿ ನಡೆಸಬಹುದು.
|
7 |
+
ಆದರೆ 10 ವಿದ್ಯಾರ್ಥಿಗಳಿದ್ದರೆ ಅದೇ ಶಾಲೆಯಲ್ಲಿ ತರಗತಿ ನಡೆಸಬೇಕು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ-1 ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಇದ್ದರೆ ಅವರು ಕಡ್ಡಾಯವಾಗಿ ಎಸ್ಎಸ್ಎಲ್ಸಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಿಕೊಳ್ಳುವಂತೆ ಮುಖ್ಯ ಶಿಕ್ಷಕರು ನೋಡಿಕೊಳ್ಳಬೇಕು. ಸಿ, ಸಿ+ ಲಿತಾಂಶ ಬಂದಿರುವ ವಿದ್ಯಾರ್ಥಿಗಳು ಲಿತಾಂಶ ಸುಧಾರಣೆಗೆ ಬಯಸಿದರೆ ನೋಂದಣಿಗೆ ಉತ್ತೇಜನ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
|
8 |
+
ಎಸ್ಎಸ್ಎಲ್ಸಿ ಪರೀಕ್ಷೆ-1 ಮುಗಿಸಿ, ಮೌಲ್ಯ ಮಾಪನ ಕಾರ್ಯವನ್ನು ಮುಗಿಸಿದ್ದ ಶಿಕ್ಷಕರಿಗೆ ಲೋಕಸಭಾ ಚುನಾವಣಾ ಕಾರ್ಯ ಬಂದಿತ್ತು. ಚುನಾವಣೆ ಮುಗಿಸಿ ಬೇಸಿಗೆ ರಜೆಯಲ್ಲಿದ್ದ ಶಿಕ್ಷಕರಿಗೆ ವಿಶೇಷ ಬೋಧನಾ ಪರಿಹಾರ ತರಗತಿಗೆ ಆಗಮಿಸುವಂತೆ ಇಲಾಖೆ ಸೂಚನೆ ನೀಡಿದ್ದು ವಿರೋಧಕ್ಕೆ ಕಾರಣವಾಗಿತ್ತು. ಮೊದಲೇ ಶಿಕ್ಷಕರು ಬೇರೆ ಇಲಾಖೆಗಳ ನೌಕರರಿಗೆ ಸಿಗುವಷ್ಟ ರಜೆಗಳು ಸಿಗುತ್ತಿಲ್ಲ ಎಂದು ದೂರಿದ್ದರು.
|
9 |
+
7ನೇ ರಾಜ್ಯ ವೇತನ ಆಯೋಗಕ್ಕೆ ಶಿಕ್ಷಕರ ಗಳಿಕೆ ರಜೆ ಹೆಚ್ಚಿಸಲು ಶಿಾರಸು ಮಾಡಬೇಕು ಎಂದು ಮನವಿ ಮಾಡಿದ್ದರು. ಈಗ ಬೇಸಿಗೆ ರಜೆ ಕಡಿತವನ್ನು ಗಳಿಕೆ ರಜೆಗೆ ಹೊಂದಿಸಲು ಸರ್ಕಾರ ಅವಕಾಶ ನೀಡಿದೆ. ಶಾಲೆಯ ಮುಖ್ಯ ಶಿಕ್ಷಕರು ಈ ವಿಶೇಷ ಬೋಧನಾ ಪರಿಹಾರ ತರಗತಿಗೆ ವೇಳಾಪಟ್ಟಿಯನ್ನು ತಯಾರು ಮಾಡಬೇಕಿದೆ. ಅಲ್ಲದೇ ಈ ತರತಿಗೆ ಬರುವ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಮಾಡಬೇಕಿದೆ. ಆದ್ದರಿಂದ ಪಠ್ಯ ಬೋಧನೆ ಮಾಡುವ ಶಿಕ್ಷಕರು ಮಾತ್ರವಲ್ಲ ಮುಖ್ಯ ಶಿಕ್ಷಕರ ಬೇಸಿಗೆ ರಜೆ ಸಹ ಕಡಿತಗೊಂಡಿದೆ. ಈಗ ಗಳಿಕೆ ರಜೆ ಪಡೆಯಲು ಅವಕಾಶ ನೀಡಿರುವುದು ಶಿಕ್ಷಕರಿಗೆ ಸಹಾಯಕವಾಗಿದೆ.
|
eesanje/url_46_144_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳು : ಆಕ್ರೋಶ
|
2 |
+
ಬೆಂಗಳೂರು,ಮೇ 16-ರೈತರಿಗೆ ನೀಡಿರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ರಾಜ್ಯಸರ್ಕಾರ ತಾಕೀತು ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
|
3 |
+
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯಸರ್ಕಾರ ಕೂಡಲೇ ರೈತರಿಗೆ ಸಾಲ ನೀಡಿರುವ ಎಲ್ಲಾ ಬ್ಯಾಂಕುಗಳ ಮುಖ್ಯಸ್ಥರ ಸಭೆ ನಡೆಸಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಬೇಕು ಹಾಗೂ ಬರಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಬೇಕು ಎಂದಿದ್ದಾರೆ.
|
4 |
+
ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದ್ದ ಬರಪರಿಹಾರದ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳ ವರ್ತನೆ ನಿಜಕ್ಕೂ ಕ್ರೂರಾತಿಕೂರವಾಗಿದ್ದು, ಖಂಡನೀಯವಾಗಿದೆ ಎಂದಿದ್ದಾರೆ.
|
5 |
+
ಈಗಾಗಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಎಂದರೆ ತಪ್ಪಲ್ಲ ಎಂದು ಹೇಳಿದ್ದಾರೆ.ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆ ಎಂಬುದೇ ಇಲ್ಲದಂತಾಗಿದೆ. ಹೆಸರಿಗೆ ಅನ್ನದಾತ. ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ದಾತನಾಗಿ ನಿಲ್ಲಬೇಕಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಟೀಕಿಸಿದ್ದಾರೆ.
|
eesanje/url_46_144_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯ ಐಟಿ ಸೆಲ್ನಲ್ಲಿ ಆಟ ಆಡುವ ಮಕ್ಕಳನ್ನು ತಂದು ಕೂರಿಸಿದಂತಿದೆ : ಕಾಂಗ್ರೆಸ್
|
2 |
+
ಬೆಂಗಳೂರು,ಮೇ 15-ಬಿಜೆಪಿಯ ಐಟಿ ಸೆಲ್ನಲ್ಲಿ ಆಟ ಆಡುವ ಮಕ್ಕಳನ್ನು ತಂದು ಕೂರಿಸಿದಂತಿದೆ, ಸರ್ಕಾರ ನಡೆಸುವಾಗ ಆಡಳಿತಾತ್ಮಕ ವಿಷಯಗಳ ಬದಲು ಲೂಟಿಯತ್ತಲೇ ಗಮನ ಹರಿಸಿದ ಬಿಜೆಪಿಗೆ ಆಡಳಿತದ ಸೂಕ್ಷ್ಮ ವಿಷಯಗಳ ಅರಿವು ಬರಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
|
3 |
+
ಟಿಎಂಎಲ್ ಸಾರ್ಟ್ ಸಿಟಿ ಮೊಬಿಲಿಟಿ ಸಲ್ಯೂಷನ್ಸ್ ಲಿಮಿಟೆಡ್ ಎಂಬ ಸಂಸ್ಥೆ ವಿದ್ಯುತ್ ಚಾಲಿತ ಬಸ್ಸುಗಳ ಸೇವೆ ಒದಗಿಸುವ ಒಪ್ಪಂದ ಮಾಡಿಕೊಂಡಿದೆ. ಬಸ್ಸುಗಳು, ಅದರ ಚಾಲಕ, ನಿರ್ವಾಹಕರ ನಿಯೋಜನೆ, ವೇತನ ಮುಂತಾದ ಎಲ್ಲಾ ವಿಷಯಗಳ ಹೊಣೆಯೂ ಸದರಿ ಸಂಸ್ಥೆಯದ್ದೇ ಆಗಿರುತ್ತದೆ.
|
4 |
+
ಆ ಸಂಸ್ಥೆಯು ತನ್ನ ಚಾಲಕರಿಗೆ ನೀಡುವ ವೇತನದಲ್ಲಿ ವ್ಯತ್ಯಯ ಆಗಿರುವ ಕಾರಣ ಚಾಲಕರು ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರ ಪರಿಣಾಮ ಎಲೆಕ್ಟ್ರಿಕ್ ಬಸ್ಸುಗಳ ಸೇವೆಯಲ್ಲಿ ವ್ಯತ್ಯಯ ಆಗಿದೆ ಎಂದು ವಿವರಿಸಲಾಗಿದೆ.
|
5 |
+
ಈ ಸೇವೆಯು ಸಂಪೂರ್ಣ ಸದರಿ ಸಂಸ್ಥೆಯ ಜವಾಬ್ದಾರಿಯಾಗಿದ್ದರೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ವಿಷಯ ತಿಳಿದ ತಕ್ಷಣವೇ ಹೆಚ್ಚುವರಿ ಬಸ್ಸುಗಳನ್ನು ನಿಯೋಜಿಸಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಅಧಿಕಾರಿಗಳು, ಸಂಸ್ಥೆಯ ಪ್ರತಿನಿಧಿಗಳು ಚಾಲಕರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.
|
6 |
+
ಟಿಎಂಎಲ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಿ ಮುಂದಿನ ದಿನಗಳಲ್ಲಿ ಈ ರೀತಿ ವ್ಯತ್ಯಯ ಆಗದಂತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಸದ್ಯ ಎಲೆಕ್ಟ್ರಿಕ್ ಬಸ್ಸುಗಳ ಸೇವೆಯು ಸರಾಗವಾಗಿ ನಡೆಯುತ್ತಿದ್ದು, ಯಾವುದೇ ಸಮಸ್ಯೆ ಇಲ್ಲದೆ ಪ್ರಯಾಣಿಕರಿಗೆ ಸೇವೆ ಒದಗಿಸಲಾಗುತ್ತಿದೆ ಎಂದು ವಿವರಿಸಲಾಗಿದೆ.
|
7 |
+
ವಿಷಯದ ಅರಿವಿಲ್ಲದೆ ಆರೋಪಿಸುವ ಬಿಜೆಪಿಯವರಿಗೆ ತಮ ಸರ್ಕಾರದ ಅವಧಿಯಲ್ಲಿ ಸಾರಿಗೆ ನೌಕರರು ಐತಿಹಾಸಿಕ ಪ್ರತಿಭಟನೆ ನಡೆಸಿದ್ದು ಮರೆತು ಹೋಗಿದೆಯೇ? ಎಂದು ಪ್ರಶ್ನಿಸಲಾಗಿದೆ.
|
8 |
+
ಸಾರಿಗೆ ನೌಕರರ ಮಕ್ಕಳು ಸಂಬಳ ಕೊಡಿ ಅಂಕಲ್ ಎಂದು ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರ ಬಳಿ ಗೋಳಾಡಿದ್ದನ್ನು ಮರೆಯಲು ಸಾಧ್ಯವೇ? ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರನ್ನು ದ್ವೇಷದಿಂದ ನೌಕರಿಯಿಂದ ಕಿತ್ತುಹಾಕಿದ್ದನ್ನು ಮರೆಯಬಹುದೇ? ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
|
eesanje/url_46_145_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯ ಮುಸ್ಲಿಂ ದ್ವೇಷ ಭವಿಷ್ಯತ್ತಿಗೆ ಮಾರಕವಾಗಲಿದೆ : ಹರಿಪ್ರಸಾದ್
|
2 |
+
ಬೆಂಗಳೂರು,ಮೇ 15-ಅಣ್ಣ ತಮಂದಿರಂತೆ ಬಾಳಿ ಬದುಕುತ್ತಿದ್ದ ಅನ್ಯ ಸಮುದಾಯಗಳಲ್ಲಿ ಕೇವಲ ಅಧಿಕಾರಕ್ಕಾಗಿ ಹೆಚ್ಚಿರುವ ದ್ವೇಷದ ಜ್ವಾಲೆ ಮನೆ-ಮನಗಳನ್ನು ಸುಡುತ್ತಿದೆ. ಅದರ ಅಪಾಯವೇ ಭವಿಷ್ಯತ್ತಿಗೆ ಮಾರಕವಾಗಲಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆತಂಕ ವ್ಯಕ್ತಪಡಿಸಿದ್ದಾರೆ.
|
3 |
+
ತಾವು ಎಂದೂ ಹಿಂದೂ-ಮುಸ್ಲಿಂ ಎಂದು ವಿಭಜನೆಯ ಮಾತುಗಳನ್ನಾಡುವುದಿಲ್ಲ, ಒಂದು ವೇಳೆ ಆ ರೀತಿ ಮಾತನಾಡಿದರೆ ಸಾರ್ವಜನಿಕ ಜೀವನದಲ್ಲೇ ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿ.ಕೆ.ಹರಿಪ್ರಸಾದ್ರವರು, ಸಮುದಾಯದವರ ಮನೆಗಳಲ್ಲಿ ಬಿರಿಯಾನಿ ತಿನ್ನುವುದು ಮೋದಿಗೆ ಬಾಲ್ಯದಿಂದಲೇ ಬೆಳದು ಬಂದಿರುವ ಪಾಠ.
|
4 |
+
ಅದಕ್ಕಾಗಿಯೇ ಕರೆದರೂ, ಕರೆಯದಿದ್ದರೂ ಬಿರಿಯಾನಿ ತಿನ್ನಬೇಕೆನಿಸಿದರೆ ಪಾಕಿಸ್ತಾನದ ಪ್ರಧಾನಿಯ ಮೊಮಗಳ ಮದುವೆಯ ಬಿರಿಯಾನಿಗೂ ಮೋದಿ ಹಾಜರಾಗುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
|
5 |
+
ಬಾಲ್ಯದಲ್ಲಿ ಈದ್, ಮೊಹರಂ ಹಬ್ಬಗಳಲ್ಲಿ ನರೇಂದ್ರ ಮೋದಿಗೆ ಅಕ್ಕ ಪಕ್ಕದ ಮುಸ್ಲಿಂ ಮನೆಗಳಿಂದಲೇ ಊಟ ಬರುತ್ತಿತ್ತಂತೆ. ಪ್ರಧಾನಿಗಳೇ, ಇದು ಕೇವಲ ನಿಮ ಮನೆಯ ಉದಾಹರಣೆಯಲ್ಲ, ಭಾರತದ ಸಂಸ್ಕೃತಿಯೇ ಇದು. ನೆರೆ ಹೊರೆಯವರು ಜಾತಿ, ಮತ, ಭೇದ ಇಲ್ಲದೇ ಬದುಕು ಕಟ್ಟಿಕೊಂಡಿದ್ದೇ ಈ ಕೊಡು ಕೊಳ್ಳುವ ಪರಂಪರೆಯಿಂದ ಎಂದು ತಿಳಿಸಿದ್ದಾರೆ.
|
6 |
+
ಉಂಡ ಮನೆಗೆ ದ್ರೋಹ ಬಗೆಯುವುದು, ಕಟ್ಟಿಕೊಂಡ ಪತ್ನಿಯನ್ನು, ನಂಬಿಕೊಂಡ ತಂದೆ ತಾಯಿಯನ್ನು ನಡು ನೀರಿನಲ್ಲಿ ಕೈ ಬಿಡುವುದು ಭಾರತೀಯ ಸಂಸ್ಕೃತಿಯೇ ಅಲ್ಲ. ಭಾರತದ ಮೂಲ ಸಂಸ್ಕೃತಿಯನ್ನು ಉಳಿಸಿದ ಹೆಮೆ ಕಾಂಗ್ರೆಸ್ ಪಕ್ಷಕ್ಕಿದೆ ಎಂದಿದ್ದಾರೆ.
|
7 |
+
ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮಗಳ ಭಾವನೆಗಳಿಗೆ ಗೌರವ ನೀಡಿದ ಹೆಮೆಯೂ ಕಾಂಗ್ರೆಸ್ ಪಕ್ಷಕ್ಕಿದೆ. ಮಾನವೀಯತೆಯೇ ಎಲ್ಲಾ ಧರ್ಮಗಳಲ್ಲಿರುವ ತಿರುಳನ್ನು ನಾವು ಉಳಿಸಿಯೇ ಸಿದ್ಧ. ನಿಮ ಮುಖವಾಡಗಳು ಇನ್ನಷ್ಟು ಬಯಲಾಗುತ್ತಲೇ ಇರುತ್ತದೆ. ಅದಕ್ಕೆ ಕಾಲವೇ ಸಾಕ್ಷಿಯಾಗುತ್ತಿದೆ ಎಂದು ಎಚ್ಚರಿಸಿದ್ದಾರೆ.
|
eesanje/url_46_145_10.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಪ್ರಜ್ವಲ್ ಪ್ರಕರಣ : ಸಿಎಂಗೆ ಪತ್ರ ಬರೆದು 16 ಬೇಡಿಕೆಯಿಟ್ಟ 107 ಸಾಹಿತಿಗಳು
|
2 |
+
ಬೆಂಗಳೂರು,ಮೇ 15-ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ 107 ಸಾಹಿತಿಗಳು ಹಾಗೂ ಪ್ರಜ್ಞಾವಂತ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು 16 ಬೇಡಿಕೆಗಳನ್ನು ಮಂಡಿಸಿದ್ದಾರೆ.
|
3 |
+
ಹಿರಿಯ ಲೇಖಕರಾದ ಡಾ.ವಿಜಯಾ, ಸಾಹಿತಿ ಡಾ.ಜಿ ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ, ಕೆ.ನೀಲಾ, ಕೆ.ಎಸ್ ವಿಮಲಾ, ಕುಂ.ವೀರಭದ್ರಪ್ಪ, ಮುಜರ್ ಅಸ್ಸಾದಿ, ಅಗ್ರಹಾರ ಕೃಷ್ಣಮೂರ್ತಿ, ಡಾ.ಲೀಲಾ ಸಂಪಿಗೆ, ಭಾನು ಮುಸ್ತಾಕ್, ದು.ಸರಸ್ವತಿ, ಜಿ.ಸಿ.ಬಯ್ಯಾರೆಡ್ಡಿ, ಗುರುಪ್ರಸಾದ್ ಕೆರೆಗೋಡು, ಮಾವಳ್ಳಿ ಶಂಕರ್ಸೇರಿದಂತೆ ಒಟ್ಟು 107 ಮಂದಿ ಪತ್ರ ಬರೆದಿದ್ದಾರೆ.
|
4 |
+
ಸಮೂಹ ಅತ್ಯಾಚಾರ ಹಗರಣ, ನಾಗರಿಕ ಸಮಾಜ ತಲೆತಗ್ಗಿಸುವ ಹೇಯ ಕೃತ್ಯ ಘಟನೆಗೆ ಸಂಬಂಧಪಟ್ಟಂತೆ ವಿಡಿಯೋಗಳು, ಫೋಟೋಗಳನ್ನು ದಾಖಲಿಸಿಟ್ಟುಕೊಂಡಿರುವುದು, ಸಂತ್ರಸ್ತರು ದೂರು ನೀಡದಂತೆ ಬೆದರಿಸುವುದು, ಅಪಹರಿಸುವುದು ಅಪರಾಧವಾಗಿದೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
|
5 |
+
ಎಂದೂ ಕೇಳರಿಯದಂತಹ ಇಂತಹ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿರುವುದು ಆಘಾತಕಾರಿ. ಪ್ರಜ್ವಲ್ ರೇವಣ್ಣ ಅವರ ಕುಟುಂಬದ ಸದಸ್ಯರು ಸಾಂವಿಧಾನಿಕವಾಗಿ ಹಲವು ಹುದ್ದೆಗಳನ್ನು ಮತ್ತು ಸೌಲಭ್ಯಗಳನ್ನು ಅನುಭವಿಸುತ್ತಾ ಬಂದಿದ್ದಾರೆ. ಹಗರಣ ಬೆಳಕಿಗೆ ಬಂದ ಕೂಡಲೇ ಹಾಸನದ ಲೋಕಸಭಾ ಚುನಾವಣೆಯನ್ನು ಸ್ಥಗಿತಗೊಳಿಸದೇ ಇರುವುದು ಹಾಗೂ ಆರೋಪಿಯನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಆರೋಪಿಯ ಚಲನವಲನಗಳ ಮೇಲೆ ಕಣ್ಗಾವಲು ಹಾಕದೇ ಆತ ದೇಶ ಬಿಟ್ಟು ಹೋಗಲು ಅವಕಾಶ ಮಾಡಿಕೊಡಲಾಗಿದೆ. ಹೀಗಾದರೆ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಸರ್ಕಾರದ ಮೇಲೆ ವಿಶ್ವಾಸ ಇಡಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
|
6 |
+
ವಿಡಿಯೋ ಬಹಿರಂಗಗೊಂಡಿರುವುದರಿಂದ ಸಂತ್ರಸ್ತರಿಗೆ ಸಾಕಷ್ಟು ಮುಜುಗರವಾಗಿದ್ದು, ಸಾರ್ವಜನಿಕವಾಗಿ ತಿರುಗಾಡಲು ತೊಂದರೆಯಾಗುತ್ತಿದೆ. ಅವರ ಕುಟುಂಬಸ್ಥರು ಮಾನಸಿಕ ಯಾತನೆಗೆ ಗುರಿಯಾಗಿದ್ದಾರೆ. ವಿಡಿಯೋಗಳು, ಯುವಜನರು, ಕಾಮುಕರು, ಮಕ್ಕಳ ಮೇಲೆ ಘೋರ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
|
7 |
+
ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು, ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು, ಸಂತ್ರಸ್ತ ಮಹಿಳೆಯರನ್ನು ಹೆದರಿಸುವ, ಅವಹೇಳನ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಕಟಣೆ ನೀಡಬೇಕು. ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳದಂತೆ ಕಡಿವಾಣ ಹಾಕಬೇಕು, ಎಸ್ಐಟಿ ತನಿಖೆಗೆ 2 ತಿಂಗಳ ಕಾಲಮಿತಿ ನಿಗದಿ ಮಾಡಬೇಕು. ಪ್ರಜ್ವಲ್ ಅವರ ಕಾರು ಚಾಲಕ ಕಾರ್ತಿಕ್ನನ್ನು ಬಂಧಿಸಬೇಕು, ದೇವರಾಜೇಗೌಡ ಅವರ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
|
8 |
+
ವಿಡಿಯೋಗಳನ್ನು ಬಹಿರಂಗಗೊಳಿಸುವ ಮೂಲಕ ಚುನಾವಣೆಯನ್ನು ಅಸ್ತವ್ಯಸ್ತಗೊಳಿಸಲು ಸಂಚು ಮಾಡಿದವರ ವಿರುದ್ಧ ಗಂಭೀರ ಸ್ವರೂಪದ ಪ್ರಕರಣ ದಾಖಲಿಸಬೇಕು. ವಿಡಿಯೋಗಳ ಬಗ್ಗೆ ಮಾಹಿತಿ ಹೊಂದಿದ್ದ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರೀಯ ಅಧ್ಯಕ್ಷರನ್ನು ಸಂಚಿನ ಭಾಗ ಎಂದು ಪರಿಗಣಿಸಬೇಕು. ಪ್ರಜ್ವಲ್ ಅವರ ಕುಟುಂಬದ ಸದಸ್ಯರ ಬಗ್ಗೆಯೂ ಪ್ರಕರಣ ದಾಖಲಿಸಬೇಕು.
|
9 |
+
ಆರೋಪಿ ದೇಶ ಬಿಟ್ಟು ಪರಾರಿಯಾಗಲು ಅವಕಾಶ ಮಾಡಿಕೊಟ್ಟ ಗುಪ್ತಚರ ಅಧಿಕಾರಿಗಳನ್ನು ವಜಾಗೊಳಿಸಬೇಕು. ಹಾಸನದಲ್ಲಿ ಎಚ್.ಡಿ.ರೇವಣ್ಣ ಅವರ ಶಿಫಾರಸಿನ ಮೇಲೆ ನಿಯೋಜನೆಗೊಂಡ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ತನಿಖೆ ಪೂರ್ಣಗೊಳ್ಳುವವರೆಗೂ ರೇವಣ್ಣ ಅವರ ಶಾಸಕತ್ವವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
|
10 |
+
ಎಚ್.ಡಿ.ಕುಮಾರಸ್ವಾಮಿ ಪ್ರಕರಣದಲ್ಲಿ ತಮ ಹಾಗೂ ದೇವೇಗೌಡರ ಹೆಸರನ್ನು ಬಳಕೆ ಮಾಡಬಾರದು ಎಂದು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮತ್ತೊಂದೆಡೆ ತಾವೇ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡುತ್ತಿದ್ದಾರೆ ಎಂದು ಸಾಹಿತಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
eesanje/url_46_145_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸರ್ಕಾರದಲ್ಲಿರುವ ದೊಡ್ಡ ತಿಮಿಂಗಲ ಯಾವುದು ಎಂದು ಕುಮಾರಸ್ವಾಮಿಯವರು ಹೇಳಬೇಕು : ಪರಮೇಶ್ವರ್
|
2 |
+
ಬೆಂಗಳೂರು,ಮೇ 15-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸರ್ಕಾರದಲ್ಲಿರುವ ದೊಡ್ಡ ತಿಮಿಂಗಲ ಯಾವುದು ಎಂದು ಹೆಸರು ಹೇಳಬೇಕು. ಅವರಿಗೆ ತಿಮಿಂಗಲ ಯಾರು ಎಂದು ಗೊತ್ತಿರಬೇಕು. ಹಾಗಾಗಿಯೇ ಹೇಳಿಕೆ ನೀಡಿದ್ದಾರೆ. ಗೊತ್ತಿದ್ದೂ ಹೇಳದೇ ಇರುವುದು ದೊಡ್ಡ ತಪ್ಪು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ಪೆನ್ಡ್ರೈವ್ ಇದೆ ಎಂದು ಕುಮಾರಸ್ವಾಮಿ ಮೊದಲಿನಿಂದಲೂ ಹೇಳುತ್ತಲೇ ಇದ್ದಾರೆ. ಇದನ್ನೇ ಬಳಕೆ ಮಾಡಿಕೊಂಡು ದಿನಕ್ಕೊಂದು ಹೇಳಿಕೆ ನೀಡುತ್ತಾರೆ. ಮೊದಲು ಪೆನ್ಡ್ರೈವ್ ಅನ್ನು ಕೊಡಲಿ. ಅನಂತರ ತನಿಖೆ ಮಾಡಿಸದೇ ಇದ್ದರೆ ಪ್ರಶ್ನೆ ಮಾಡಲಿ ಎಂದರು.
|
4 |
+
ಪ್ರಜ್ವಲ್ ರೇವಣ್ಣ ವಿದೇಶದಿಂದ ಆಗಮಿಸುವ ಬಗ್ಗೆ ಎಸ್ಐಟಿ ಗಮನಿಸುತ್ತದೆ. ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ವಾಪಸ್ ಬರುವ ಬಗ್ಗೆ ಟಿಕೆಟ್ ಬುಕ್ ಮಾಡಿರುವ ಕುರಿತು ಯಾರಿಗೆ ಮಾಹಿತಿ ಇದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದರು.ಕೆಲವೊಮೆ ಗುಪ್ತಚರ ಇಲಾಖೆಗಿಂತಲೂ ವೇಗವಾಗಿ ಬೇರೆಯವರಿಗೆ ಮಾಹಿತಿ ಸಿಕ್ಕಿರುತ್ತದೆ. ಅಂತಹ ಮಾಹಿತಿಗಳಿದ್ದರೆ ನಮಗೆ ತಲುಪಿಸಿ, ತನಿಖೆಗೆ ಸಹಾಯವಾಗುತ್ತದೆ. ಪ್ರಜ್ವಲ್ ರೇವಣ್ಣ ಅವರ ಪ್ರಯಾಣದ ಬಗ್ಗೆ ಎಸ್ಐಟಿಗೆ ಮಾಹಿತಿ ಇರಬಹುದು ಆದರೆ ಎಲ್ಲವನ್ನೂ ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುವುದಿಲ್ಲ ಎಂದರು.
|
5 |
+
ನಿನ್ನೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಸಮಾಲೋಚನೆಗಳಾಗಿವೆ. ಮುಖ್ಯಮಂತ್ರಿಗಳು ನೀಡಿರುವ ಸೂಚನೆಗಳನ್ನು ನಾವು ಬಹಿರಂಗಪಡಿಸಲಾಗುವುದಿಲ್ಲ ಎಂದು ಹೇಳಿದರು.ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಗೆ ತಾವು ಭೇಟಿ ನೀಡಿದ್ದು, ಲೋಕಸಭಾ ಚುನಾವಣೆ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಿದ್ದೇವೆ. ಸತೀಶ್ ಜಾರಕಿಹೊಳಿ ಪುತ್ರಿ ಅಭ್ಯರ್ಥಿಯಾಗಿದ್ದಾರೆ. ಅವರು ಗೆಲ್ಲಲಿದ್ದಾರೆ ಎಂಬ ವಿಶ್ವಾಸವಿದೆ. ನಮ ಬಳಿ ಇರುವ ಮಾಹಿತಿಯನ್ನೂ ಹಂಚಿಕೊಂಡಿದ್ದೇವೆ ಎಂದರು.
|
6 |
+
ಸಮುದಾಯವಾರು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.ಸಾಹಿತಿಗಳು ಬರೆದಿರುವ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸುತ್ತೇವೆ, ಅವರಿಗೆ ಸಾಮಾಜಿಕ ಕಳಕಳಿ ಇರುತ್ತದೆ, ಸಾಮಾಜಿಕ ಆಗುಹೋಗುಗಳನ್ನು ಪ್ರತಿನಿತ್ಯ ಗಮನಿಸುತ್ತಿರುತ್ತಾರೆ, ಹೀಗಾಗಿ ಅವರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ.
|
7 |
+
|
8 |
+
ಮೇಲಾಗಿ ಹಾಸನದ ಪೆನ್ಡ್ರೈವ್ ಪ್ರಕರಣವನ್ನೇ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ . ಸಾಹಿತಿಗಳ ಪತ್ರ ಮತ್ತಷ್ಟು ಎಚ್ಚರಿಕೆ ನೀಡಿದಂತಾಗಿದೆ. ಪತ್ರದಲ್ಲಿರುವ ಅಂಶಗಳನ್ನು ಎಸ್ಐಟಿ ಅಧಿಕಾರಿಗಳು ಗಮನಿಸುತ್ತಾರೆ. ತನಿಖೆ ನಡೆಯುತ್ತಿರುವುದರಿಂದ ನಾವು ಏನನ್ನೂ ಹೇಳಲು ಅವಕಾಶ ಇಲ್ಲ ಎಂದು ಹೇಳಿದರು.
|
eesanje/url_46_145_12.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಸಾಧ್ಯತೆ..?
|
2 |
+
ಬೆಂಗಳೂರು,ಮೇ 15-ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳಾಗಲಿದ್ದು, ನಿಗಮಮಂಡಳಿಗಳ ಅಧ್ಯಕ್ಷರ ಸ್ಥಾನಪಲ್ಲಟ ಹಾಗೂ ಸಚಿವ ಸಂಪುಟ ಪುನರ್ ರಚನೆ ಕುರಿತು ಚರ್ಚೆಗಳಾಗುವ ನಿರೀಕ್ಷೆಗಳಿವೆ.
|
3 |
+
ನಿಗಮ ಮಂಡಳಿಗಳಿಗೆ ಕಳೆದ ಆರು ತಿಂಗಳಿಂದೀಚೆಗೆ ನೇಮಕಾತಿಗಳಾಗಿದ್ದು, ಎರಡೂವರೆ ವರ್ಷಗಳ ಕಾಲಾವಧಿ ಅಧಿಕಾರ ನೀಡಲಾಗಿದೆ. ಹೀಗಾಗಿ ಇನ್ನೂ ಎರಡು ವರ್ಷ ಅಧ್ಯಕ್ಷರ ಅವಧಿ ಅಬಾಧಿತ ಎಂದು ಬಿಂಬಿಸಲಾಗಿದೆ. ಆದರೆ ಬಹಳಷ್ಟು ಮಂದಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ದೂರುಗಳಿವೆ. ಅವರುಗಳನ್ನು ವಜಾಗೊಳಿಸಿ ಪಕ್ಷ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಬೇಕು ಎಂಬ ಆಗ್ರಹಗಳಿವೆ.
|
4 |
+
ಲೋಕಸಭಾ ಚುನಾವಣೆಗೂ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,ಯಾರು ಪ್ರಾಮಾಣಿಕವಾಗಿ ಕೆಲಸ ಮಾಡುವುದಿಲ್ಲವೋ, ಪಕ್ಷಕ್ಕೆ ಬೂತ್ ಮಟ್ಟದಿಂದ ಶಕ್ತಿ ತುಂಬುವುದಿಲ್ಲವೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಅದರ ಹೊರತಾಗಿಯೂ ಬಹಳಷ್ಟು ಮಂದಿ ಹೈಕಮಾಂಡ್ ಆದೇಶವನ್ನು ಲೆಕ್ಕಿಸದೆ ವೈಯಕ್ತಿಕ ಹಾಗೂ ಸ್ವಾರ್ಥಕ್ಕಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ದೂರುಗಳಿವೆ. ಹೀಗಾಗಿ ಅವಧಿಗೂ ಮೊದಲೇ ಕೆಲವರ ಬದಲಾವಣೆಯ ಚರ್ಚೆಗಳು ನಡೆಯಲಿವೆ ಎಂದು ಹೇಳಲಾಗಿದೆ.
|
5 |
+
ಪ್ರಮುಖವಾಗಿ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ಬದಲಾವಣೆಗಳಾಗುವ ನಿರೀಕ್ಷೆಗಳಿವೆ. ಕಾಂಗ್ರೆಸ್ಗೆ ಹಿನ್ನಡೆಯಾಗುವ ಕ್ಷೇತ್ರಗಳಿಗೆ ಉಸ್ತುವಾರಿ ಸಚಿವರುಗಳನ್ನೇ ಹೊಣೆ ಮಾಡಲಾಗುವುದು ಎಂಬ ಸಂದೇಶವನ್ನು ಆರಂಭದಲ್ಲೇ ನೀಡಲಾಗಿದೆ. ಹೀಗಾಗಿ ಲೋಕಸಭಾ ಚುನಾವಣೆ ಬಹಳಷ್ಟು ಸಚಿವರ ನೆತ್ತಿಯ ಮೇಲೆ ತೂಗುಗತ್ತಿಯಾಗಿದೆ.
|
6 |
+
ಸಂಪುಟಕ್ಕೆ ಸೇರ್ಪಡೆಯಾಗುವವರ ಸರತಿ ಸಾಲು ದೊಡ್ಡದಿದೆ. ಬಹಳಷ್ಟು ಹಿರಿಯ ಶಾಸಕರು, ಪ್ರಭಾವಿಗಳು ಸಂಪುಟದಲ್ಲಿ ಅವಕಾಶ ಗಿಟ್ಟಿಸಬೇಕು ಎಂದು ಲಾಭಿ ನಡೆಸುತ್ತಲೇ ಇದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗುವ ಕ್ಷೇತ್ರಗಳಲ್ಲಿ ಸಚಿವರ ಬದಲಾವಣೆಯಾಗಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂಬ ಕೂಗೇಳುವುದು ಸಹಜವಾಗಿದೆ.
|
7 |
+
ಲೋಕಸಭಾ ಚುನಾವಣೆ ಕಾಂಗ್ರೆಸ್ಗೆ ಅಳಿವು-ಉಳಿವಿನ ಪ್ರಶ್ನೆಯಾಗಿತ್ತು. ಹೀಗಾಗಿ ಅಸಮಾಧಾನಿತರು, ಅತೃಪ್ತರು ಯಾವುದೇ ಬಹಿರಂಗ ಹೇಳಿಕೆ ನೀಡದೇ ಪಕ್ಷಕ್ಕಾಗಿ ಸಹಿಸಿಕೊಳ್ಳಬೇಕೆಂಬ ಕಟ್ಟುನಿಟ್ಟಿನ ನಿರ್ದೇಶನಗಳು ಜಾರಿಯಲ್ಲಿದ್ದವು. ಅದರಂತೆ ಬಹಳಷ್ಟು ಹಿರಿಯ ಶಾಸಕರು ನಡೆದುಕೊಂಡಿದ್ದಾರೆ.
|
8 |
+
ಬಿ.ಆರ್.ಪಾಟೀಲ್, ಬಸವರಾಜರಾಯರೆಡ್ಡಿಯಂತಹ ಇಬ್ಬರನ್ನು ಹೊರತುಪಡಿಸಿದರೆ ಬಹುತೇಕ ಶಾಸಕರು ಉಸಿರೆತ್ತದೆ ಅವುಡುಗಚ್ಚಿ ಎಲ್ಲವನ್ನೂ ಸಹಿಸಿಕೊಂಡಿದ್ದಾರೆ.ಅಜಯ್ಸಿಂಗ್ರಂತಹ ಪ್ರಭಾವಿ ಶಾಸಕರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ಪಕ್ಷಕ್ಕಾಗಿ ತ್ಯಾಗ ಮಾಡಿದ್ದಾರೆ.ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಸಂಪುಟದಲ್ಲಿ ಅವಕಾಶಕ್ಕಾಗಿ ಈ ರೀತಿಯ ಹಲವು ಶಾಸಕರು ಧ್ವನಿಯೆತ್ತಲಿದ್ದಾರೆ ಎಂಬ ಚರ್ಚೆಗಳಿವೆ.
|
9 |
+
ಮುಂದಿನ ದಿನಗಳಲ್ಲಿ ಗ್ರಾಮೀಣ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿವೆ. ಪಕ್ಷದ ಬಲವರ್ಧನೆಗೆ ಸ್ಥಳೀಯ ನಾಯಕತ್ವವನ್ನು ಸದೃಢಗೊಳಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆವರೆಗೂ ತಾಳೆಯಿರಲಿ ಎಂದು ಹೈಕಮಾಂಡ್ ನಾಯಕರು ಸಂಪುಟದ ಆಕಾಂಕ್ಷಿಗಳಿಗೆ ಮತ್ತು ಪ್ರಭಾವಿಗಳ ಮನವೊಲಿಸುವ ಸಾಧ್ಯತೆಗಳಿವೆ.
|
10 |
+
ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ಈ ಮೊದಲು ಭಾರೀ ಚರ್ಚೆಯಾಗಿತ್ತು. ಈಗ ಮತ್ತೊಮೆ ಅದು ಮುನ್ನೆಲೆಗೆ ಬರುವ ಸಾಧ್ಯತೆಗಳಿವೆ.ಏನೇ ಆದರೂ ಲೋಕಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯನ್ನು ತೀವ್ರಗೊಳಿಸುವುದನ್ನು ತಳ್ಳಿಹಾಕುವಂತಿಲ್ಲ.
|
eesanje/url_46_145_2.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಆಪ್ತವರ್ಗದವರಿಗೆ 7 ಬಿಡಿಎ ಸಂಕೀರ್ಣ ಗುತ್ತಿಗೆ ನೀಡಲು ಸಿಎಂ ಹುನ್ನಾರ : ಎನ್ಆರ್ಆರ್ ಆರೋಪ
|
2 |
+
ಬೆಂಗಳೂರು,ಮೇ.15-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹದಿನೈದು ಸಾವಿರ ಕೋಟಿಗೂ ಅಧಿಕ ಮೌಲ್ಯದ 7 ಬಿಡಿಎ ಸಂಕೀರ್ಣಗಳನ್ನು ಕಾನೂನು ನಿಯಮಗಳನ್ನು ಗಾಳಿಗೆ ತೂರಿ ತಮ ಆಪ್ತ ರಾಜಕಾರಣಿಗಳ ಪಾಲುದಾರಿಕೆ ಸಂಸ್ಥೆಗಳಿಗೆ ಗುತ್ತಿಗೆ ಹೆಸರಿನಲ್ಲಿ ಶಾಶ್ವತ ಉಡುಗೊರೆ ನೀಡಲು ಮುಂದಾಗಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.
|
3 |
+
2017-18 ರ ಸಾಲಿನಲ್ಲಿ ಸಿದ್ಧರಾಮಯ್ಯ ನವರು ಮುಖ್ಯಮಂತ್ರಿಗಳಾಗಿದ್ದ ಅಧಿಕಾರವಧಿಯ ಅಂತಿಮ ಹಂತದಲ್ಲಿ ಬೆಂಗಳೂರು ಮಹಾನಗರದ ಹದಯ ಭಾಗದ ಪ್ರದೇಶಗಳಾದ ಇಂದಿರಾನಗರ, ಕೋರಮಂಗಲ, ಹೆಚ್ಎಸ್ಆರ್ ಬಡಾವಣೆ, ಸದಾಶಿವನಗರ, ಆರ್.ಟಿ. ನಗರ, ಕಾಕ್ಸ್ ಟೌನ್ ಮತ್ತು ಚಂದ್ರಾ ಲೇಔಟ್ ಗಳಲ್ಲಿರುವ 7 ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಅವರ ಅತ್ಯಂತ ಆಪ್ತ ವಲಯದಲ್ಲಿರುವ ಸಚಿವ ಕೆ. ಜೆ. ಜಾರ್ಜ್ ರವರ ಪಾಲುದಾರಿಕೆಯ ಎಂಬೆಸಿ ಸಂಸ್ಥೆ ಮತ್ತು ಮೆವರಿಕ್ ಹೋಲ್ಡಿಂಗ್್ಸ ಸಂಸ್ಥೆಗೆ 65 ವರ್ಷಗಳ ಗುತ್ತಿಗೆಗೆ ನೀಡುವಂತಹ ಜನ ವಿರೋಧಿ ಕಾರ್ಯ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
|
4 |
+
ಈ ಕುರಿತಂತೆ 2019 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರಿಗೆ ನಾನು ದಾಖಲೆಗಳ ಸಹಿತ ಪತ್ರ ಮುಖೇನ ಈ ಕಾನೂನು ಬಾಹಿರ ಕಾರ್ಯದ ಬಗ್ಗೆ ತಿಳಿಸಿದ ನಂತರ ಅವರು ಈ ಕಾನೂನು ಬಾಹಿರ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿ ಆದೇಶಿಸಿದ್ದರು.
|
5 |
+
ಆದರೆ, ಇದೀಗ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸುತ್ತಿರುವ ಸಿದ್ಧರಾಮಯ್ಯ ಅವರು ಇದೀಗ ಮತ್ತೆ ಏಳು ಬಿಡಿಎ ಸಂಕೀರ್ಣಗಳ ಮರುನಿರ್ಮಾಣದ ಹೆಸರಿನಲ್ಲಿ ಎಂಬೆಸ್ಸಿ ಹಾಗೂ ಮೆವರಿಕ್ ಸಂಸ್ಥೆಗಳಿಗೆ 65 ವರ್ಷಗಳ ಗುತ್ತಿಗೆ ನೀಡಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
|
6 |
+
ಇಂದಿರಾನಗರ ವಾಣಿಜ್ಯ ಸಂಕೀರ್ಣವು ಪ್ರಸ್ತುತ ಸುಮಾರು 7,000 ಕೋಟಿ ರೂಪಾಯಿಗಳಿಗೂ ಹೆಚ್ಚು ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ಇನ್ನುಳಿದ 6 ವಾಣಿಜ್ಯ ಸಂಕೀರ್ಣಗಳು ಸುಮಾರು 8,000 ದಿಂದ 9,000 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯವನ್ನು ಹೊಂದಿರುತ್ತವೆ.
|
7 |
+
15,000 ಕೋಟಿ ರೂಪಾಯಿಗಳಿಗೂ ಹೆಚ್ಚು ಬೆಲೆಬಾಳುವ ಈ 7 ಅತ್ಯಮೂಲ್ಯ ಸರ್ಕಾರಿ ಸ್ವತ್ತುಗಳನ್ನು ಸಂರಕ್ಷಿಸಿಕೊಳ್ಳಬೇಕಿರುವ ರಾಜ್ಯ ಸರ್ಕಾರವೇ ಪ್ರಭಾವಿ ವ್ಯಕ್ತಿಗಳ ಪಾಲುದಾರಿಕೆಯ ಸಂಸ್ಥೆಗಳಿಗೆ 35 ವರ್ಷಗಳ ನೇರ ಗುತ್ತಿಗೆ ಮತ್ತು 30 ವರ್ಷಗಳ ವಿಸ್ತರಿಸಬಹುದಾದ ಗುತ್ತಿಗೆ ಅಂದರೆ 65 ವರ್ಷಗಳ ಗುತ್ತಿಗೆಗೆ ನೀಡುವ ಮೂಲಕ ಇಂತಹ ಅಮೂಲ್ಯ ಸರ್ಕಾರಿ ಸ್ವತ್ತುಗಳು ಶಾಶ್ವತವಾಗಿ ನಮಿಂದ ದೂರ ಮಾಡುವ ಹುನ್ನಾರ ನಡೆಸುತ್ತಿದ್ದಾರೆ ಎಂದು ರಮೇಶ್ ದೂರಿದ್ದಾರೆ.
|
8 |
+
ಸಿದ್ಧರಾಮಯ್ಯ ನವರ ಈ ಜನ ವಿರೋಧಿ ಕಾರ್ಯದ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ��ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗುತ್ತಿದೆ ಹಾಗೂ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನೂ ಸಹ ದಾಖಲಿಸಲಾಗುತ್ತಿದೆ ಎಂಬ ವಿಷಯವನ್ನು ಪತ್ರದ ಮೂಲಕ ಸಿದ್ಧರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದು ರಮೇಶ್ ಸುದ್ದಿಗಾರರಿಗೆ ತಿಳಿಸಿದರು.
|
eesanje/url_46_145_3.txt
ADDED
@@ -0,0 +1,4 @@
|
|
|
|
|
|
|
|
|
|
|
1 |
+
ವಿಧಾನ ಮಂಡಲ/ವಿಧಾನಸಭೆಯ ಸ್ಥಾಯಿ ಸಮಿತಿಗಳ ಸಭೆಗೆ ಸ್ಪೀಕರ್ ಅನುಮತಿ
|
2 |
+
ಬೆಂಗಳೂರು, ಮೇ 15-ಪ್ರಸಕ್ತ ಲೋಕಸಭೆಯ ಎರಡು ಹಂತದ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅನುಮತಿ ನೀಡಿದ್ದಾರೆ.
|
3 |
+
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ವಿಧಾನ ಮಂಡಲದ/ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸದಂತೆ ಸಭಾಧ್ಯಕ್ಷರು ಶಾಸಕರಿಗೆ ಪ್ರಕಟಣೆ ಮೂಲಕ ತಿಳಿಸಿದ್ದರು.
|
4 |
+
ರಾಜ್ಯದಲ್ಲಿ ಎರಡು ಹಂತಗಳ ಚುನಾವಣೆಯ ಮತದಾನ ಮುಕ್ತಾಯವಾಗಿರುವುದರಿಂದ ಸಮಿತಿಗಳ ಸಭೆಗಳನ್ನು ನಡೆಸಲು ಸಭಾಧ್ಯಕ್ಷರು ಶಾಸಕರಿಗೆ ಅನುಮತಿ ನೀಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
|
eesanje/url_46_145_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಉಷ್ಣಾಂಶ ಹೆಚ್ಚಳ : ರಾಜ್ಯದಲ್ಲಿ ಹಾವು ಕಡಿತದ ಪ್ರಕರಣಗಲ್ಲಿ ದಾಖಲೆ ಏರಿಕೆ
|
2 |
+
ಬೆಂಗಳೂರು,ಮೇ.15-ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಬೆನ್ನಲ್ಲೇ ಹಾವುಗಳ ಕಡಿತ ಪ್ರಮಾಣ ಹೆಚ್ಚಾಗಿ ಅಪಾರ ಸಾವು-ನೋವು ಸಂಭವಿಸಿದೆ.ಉಷ್ಣಾಂಶ ಏರಿಕೆಯಿಂದ ಬಿಲದಲ್ಲಿ ಇರಲಾರದೆ ಹೊರ ಬಂದಿರುವ ಹಾವುಗಳು ಕಂಡ ಕಂಡವರಿಗೆ ಕಚ್ಚಿರುವ ಪ್ರಕರಣಗಳು ಹೆಚ್ಚಾಗಿವೆ. ಇನ್ನೊಂದೆಡೆ ಆಸ್ಪತ್ರೆಗಳಲ್ಲಿ ಹಾವು ಕಡಿತದ ಔಷಧಿ ಕೊರತೆಯು ಕಂಡು ಬಂದಿದೆ.
|
3 |
+
ಕಳೆದ ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ವರ್ಷ ಹಾವು ಕಡಿತಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿರುವುದು ಅಂಕಿ-ಅಂಶಗಳಿಂದ ಬಹಿರಂಗಗೊಂಡಿದೆ.ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಗರಿಷ್ಠ ಸಂಖ್ಯೆಯಲ್ಲಿ ಹಾವುಗಳ ಕಡಿತದ ಪ್ರಮಾಣ ಹೆಚ್ಚಾಗಿದೆ.. ಜನವರಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 2316 ಹಾವು ಕಡಿತದ ಪ್ರಕರಣ ಕಂಡು ಬಂದಿದ್ದು 18 ಜನರು ಹಾವು ಕಡಿತದಿಂದ ಸಾವಿಗೆ ಬಲಿಯಾಗಿದ್ದಾರೆ..
|
4 |
+
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 46 ಜನರು ಹಾವು ಕಡಿತದಿಂದ ಸಾವಿಗೀಡಾಗಿದ್ದಾರೆ. ಕೆಲವರು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಮತಪಟ್ಟಿದ್ದರೆ ಕೆಲವರು ಔಷಧ ಸಿಗದೆ ಸಾವನ್ನಪ್ಪಿದ್ದರು ಎನ್ನಲಾಗಿದೆ. ಮೂರು ವರ್ಷಗಳಲ್ಲಿ 13 ಸಾವಿರ ಜನರು ಹಾವು ಕಡಿತಕ್ಕೆ ಒಳಗಾಗಿದ್ದು, 46 ಮಂದಿ ಮತಪಟ್ಟಿದ್ದಾರೆ. ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಹೀಗಿದ್ದರೂ, ಹಾವು ಕಡಿತದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಸಂಗ್ರಹವು ಆಸ್ಪತ್ರೆಗಳಲ್ಲಿ ಲಭ್ಯವಿಲ್ಲ ಎಂಬ ಆರೋಪ ಕೇಳಿ ಬರ್ತಿದೆ ಎನ್ನುತ್ತಾರೆ ಪ್ರಾಣಿ ಪರಿಪಾಲಕ ಪಸನ್ನ ಅವರು.
|
5 |
+
ರಾಜ್ಯದ ಎಲ್ಲ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತದ ಚಿಕಿತ್ಸೆಗೆ ಅಗತ್ಯ ಇರುವ ಔಷಧ ದಾಸ್ತಾನು ಇಟ್ಟುಕೊಳ್ಳಬೇಕು. ಆದರೆ, ರಾಜ್ಯಾದ್ಯಂತ ಹಾವು ಕಡಿತದ ಔಷಧಿ ಆಸ್ಪತ್ರೆಗಳಲ್ಲಿ ಕೊರತೆ ಕಾಡುತ್ತಿದೆ. ಹಾವು ಕಡಿತದ 83,620 ವಯಲ್ ಚುಚ್ಚುಮದ್ದಿಗೆ ಇತ್ತೀಚೆಗೆ ಆರೋಗ್ಯ ಇಲಾಖೆ ಟೆಂಡರ್ ಆಹ್ವಾನಿಸಿತ್ತು ಆದರೆ ಬೇಡಿಕೆಯಷ್ಟು ಔಷಧಿ ಪೂರೈಕೆಯಾಗಿಲ್ಲ ಎಂದು ತಿಳಿದುಬಂದಿದೆ.
|
6 |
+
2021ರಲ್ಲಿ 950 ಕಡಿತ ಪ್ರಕರಣಗಳು ದಾಖಲಾಗಿದ್ದು ಯಾರೊಬ್ಬರು ಮೃತಪಟ್ಟಿರಲಿಲ್ಲ. 2022ರಲ್ಲಿ 3439 ಕಡಿತದಿಂದ 17 ಮಂದಿ ಪ್ರಾಣ ಕಳೆದುಕೊಂಡಿದ್ದರು. 2023ರಲ್ಲಿ 6596 ಕಡಿತ ಪ್ರಕರಣಗಳಲ್ಲಿ 19 ಮಂದಿ ಜೀವ ತೆತ್ತಿದ್ದರು ಈ ವರ್ಷ ಆರು ತಿಂಗಳು ಕಳೆಯುವುದರೊಳಗೆ 2316 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು ಈಗಾಗಲೇ 18 ಮಂದಿ ಅಸು ನೀಗಿದ್ದಾರೆ.
|
7 |
+
ಕಳೆದ ಫೆಬ್ರವರಿ 12ರಂದು ರಾಜ್ಯ ಸರಕಾರ ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದೆ. ರಾಜ್ಯದ ಎಲ್ಲಾ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾವು ಕಡಿತದ ಎಲ್ಲ ಪ್ರಕರಣಗಳನ್ನು ಅಂದರೆ ಒಳ ರೋಗಿಗಳು, ಹೊರ ರೋಗಿಗಳು ಮತ್ತು ಸಾವಿನ ಪ್ರಕರಣಗಳೇ ಆಗಿರಲಿ ಸಮಗ್ರ ಆರೋಗ್ಯ ಮಾಹಿತಿ ನೋಂದಾಯಿಸಬೇಕು ಎಂದು ಆದೇಶಿಸಿದೆ. ಕರ್ನಾಟಕದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೂ ಸಾವಿನ ಸಂಖ್ಯೆ ಮಾತ್ರ ತಗ್ಗಿಲ್ಲ ಎನ್ನುವಂತಾಗಿದೆ.
|
eesanje/url_46_145_5.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಆಯ್ಕೆ, ಬಿ ಫಾರಂ ನೀಡಿದ ಗೌಡರು
|
2 |
+
ಬೆಂಗಳೂರು, ಮೇ 15-ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಲಾಗಿದೆ. ವಿವೇಕಾನಂದ ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಂದು ವಿವೇಕಾನಂದ ಅವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿ ಫಾರಂ ನೀಡಿದ್ದಾರೆ.
|
3 |
+
ಪದನಾಭನಗರದ ಗೌಡರ ನಿವಾಸದಲ್ಲಿ ಬಿ ಫಾರಂ ನೀಡುವ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ಮುಖಂಡರಾದ ನಿರಂಜನ್ ಮೂರ್ತಿ, ನಾಗಣ್ಣಗೌಡರು ಉಪಸ್ಥಿತರಿದ್ದರು.
|
4 |
+
ಮರಿತಿಬ್ಬೇಗೌಡ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಬಳಿಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದರು.
|
5 |
+
ಲೋಕಸಭೆ ಚುನಾವಣೆಯಂತೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಮೇಲನೆ ಚುನಾವಣೆಯಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ. ಈ ನಡುವೆ ಬಿಜೆಪಿ ನೈರುತ್ಯ ಶಿಕ್ಷಕರ ಕ್ಷೇತ್ರ ಹೊರತು ಪಡಿಸಿ ಉಳಿದ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು.ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಇ.ಸಿ.ನಿಂಗರಾಜು ಅವರಿಗೆ ಟಿಕೆಟ್ ಘೋಷಣೆಯಾಗಿತ್ತು. ಬಳಿಕ ಜೆಡಿಎಸ್ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ. ನಿಂಗರಾಜು ಕೂಡ ಸ್ಪರ್ಧಿಸಲು ಅಣಿಯಾಗಿರುವುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.
|
eesanje/url_46_145_6.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಸಂಭ್ರಮಾಚರಣೆ ಮಾಡದಂತೆ ಶಾಸಕ ಹೆಚ್.ಡಿ.ರೇವಣ್ಣ ಮನವಿ
|
2 |
+
ಬೆಂಗಳೂರು, ಮೇ 15-ಸಂಭ್ರಮಾಚರಣೆ ಮಾಡದಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮಾಜಿ ಸಚಿವ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಮನವಿ ಮಾಡಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವುದಕ್ಕೆ ಹಾಸನದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದು ಬೇಡ, ಯಾವುದೇ ರ್ಯಾಲಿಯನ್ನು ಮಾಡುವುದು ಬೇಡ. ನಮ ತಂದೆ-ತಾಯಿ ಅವರ ಆಶೀರ್ವಾದ, ಕಾರ್ಯಕರ್ತರ, ಅಭಿಮಾನಿಗಳ ನಿಮ ಪ್ರೀತಿ, ಹಾರೈಕೆಯಿಂದ ಜಾಮೀನು ಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ.
|
4 |
+
ತಮ ಮೇಲಿನ ಆರೋಪ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ತಲೆಬಾಗುತ್ತೇನೆ. ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇನೆ. ನ್ಯಾಯಾಂಗದ ಬಗ್ಗೆ ಅಪಾರ ಗೌರವವಿದೆ. ಎಲ್ಲವನ್ನೂ ನ್ಯಾಯಾಲಯಕ್ಕೆ ಬಿಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ.
|
5 |
+
ನಾನು ಎಲ್ಲೂ ಹೋಗುವುದಿಲ್ಲ. ದೇವರ ಮೇಲೆ ನಂಬಿಕೆ ಇದೆ. ಈ ಆಪತ್ತಿನಿಂದ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.
|
eesanje/url_46_145_7.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪರಿಷತ್ ಚುನಾವಣೆ : ಮೂರು ಪಕ್ಷಗಳಿಗೂ ಬಂಡಾಯದ ಭೀತಿ
|
2 |
+
ಬೆಂಗಳೂರು, ಮೇ 15-ಲೋಕಸಭಾ ಚುನಾವಣೆಗಿಂತಲೂ ವಿಧಾನ ಪರಿಷತ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿದ್ದು, ಮೂರು ಪಕ್ಷಗಳೂ ಬಂಡಾಯದ ಬಿಸಿ ಎದುರಿಸುವಂತಾಗಿದೆ. ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಜೂನ್ ಮೂರರಂದು ಮತದಾನ ನಡೆಯಲಿದೆ. ಈಗಾಗಲೇ ಮೂರು ಪಕ್ಷಗಳು ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸ್ಪರ್ಧೆಗಿಳಿಸುತ್ತಿವೆ.
|
3 |
+
ನಾಮಪತ್ರ ಸಲ್ಲಿಸಲೂ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿದ್ದು, ಬೆಂಗಳೂರು ಪದವೀಧರರ, ಕರ್ನಾಟಕ ದಕ್ಷಿಣ ಶಿಕ್ಷಕರ, ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲೂ ಬಂಡಾಯವಿರುವುದು ಕಂಡುಬರುತ್ತಿದೆ.
|
4 |
+
ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ನಾಮಪತ್ರ ಸಲ್ಲಿಸಿ ಸ್ಪರ್ಧೆಗಿಳಿದಿದ್ದಾರೆ. ಕಾಂಗ್ರೆಸ್ ಟಿಕೆಟ್ ಸಿಗದಿದ್ದರೂ ನೀಲಕಂಠ ಆರ್. ಗೌಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯದ ಬಿಸಿ ಎದುರಿಸುವಂತಾಗಿದೆ.
|
5 |
+
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್ .ಭೋಜೇಗೌಡ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಆದರೂ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ನ ಮಾಜಿ ಸದಸ್ಯ ಎಸ್.ಆರ್.ಹರೀಶ್ ಆಚಾರ್ಯ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಇದು ಮೈತ್ರಿ ಪಕ್ಷಗಳಿಗೆ ತಲೆನೋವಾಗಿದೆ.
|
6 |
+
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಸ್ಪರ್ಧಿಸಿದ್ದಾರೆ. ಆದರೆ, ಈ ಕ್ಷೇತ್ರ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಸಂಜೆ ಶಿಕ್ಷಕರ ಸಭೆ ಕರೆದಿದ್ದು, ಬಂಡಾಯ ಸ್ಪರ್ಧೆ ಮಾಡುವ ಸುಳಿವು ನೀಡಿದ್ದಾರೆ ಎನ್ನಲಾಗಿದೆ.
|
7 |
+
ಅಲ್ಲದೆ, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಇ.ಸಿ.ನಿಂಗರಾಜು ಅವರನ್ನು ಘೋಷಿಸಿದ್ದಾರೆ. ನಿಂಗರಾಜು ಕೂಡ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.ಹೀಗಾಗಿ ಮೂರು ಕ್ಷೇತ್ರಗಳಲ್ಲೂ ಮೂರು ರಾಜಕೀಯ ಪಕ್ಷಗಳಿಗೆ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಸ್ಪರ್ಧೆ ಮಾಡುತ್ತಿರುವುದು ತಲೆನೋವಾಗಿ ಪರಿಣಮಿಸಿದೆ.
|
eesanje/url_46_145_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಪ್ರಜ್ವಲ್ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ : ಶಾಸಕ ಜಿ.ಟಿ.ದೇವೇಗೌಡ
|
2 |
+
ಬೆಂಗಳೂರು,ಮೇ 15-ಸಂಸದ ಪ್ರಜ್ವಲ್ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಕೇಳಿ ಬಂದ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಎಲ್ಲಿಗೆ ಹೋದರು? ಏಕೆ ಹೋದರು? ಯಾವಾಗ ಬರುತ್ತಾರೆ? ಎಂಬ ಮಾಹಿತಿ ಯಾರಿಗೂ ಇಲ್ಲ. ಅವರ ಮನೆಯವರಿಗೂ ಸರಿಯಾದ ಮಾಹಿತಿ ಇಲ್ಲವಂತೆ ಎಂದರು.
|
3 |
+
ಅವರನ್ನು ಪತ್ತೆ ಹಚ್ಚಲು ಸರ್ಕಾರ ಬ್ಲೂ ಕಾರ್ನರ್ ನೋಟೀಸ್ ಕೊಟ್ಟಿದ್ದು, ಅವರನ್ನು ಪತ್ತೆ ಹಚ್ಚುವ ಕೆಲಸ ಸರ್ಕಾರ ಮಾಡುತ್ತಿದೆಯಾದರೂ ಅವರು ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಿದರು.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ರೇವಣ್ಣ ಅವರು ಬಂಧನವಾಗಿದ್ದಕ್ಕೆ ನೋವನ್ನು ವ್ಯಕ್ತಪಡಿಸಿದ್ದಾರೆ. ತಪ್ಪು ಮಾಡದಿದ್ದರೂ ರೇವಣ್ಣ ಅವರ ಬಂಧನವಾಗಿತ್ತು. ಈ ವಿಚಾರ ದೇವೇಗೌಡರಿಗೆ ಬಹಳ ನೋವುಂಟು ಮಾಡಿದೆ ಎಂದರು.
|
4 |
+
ಸರ್ಕಾರ ಪ್ರಜ್ವಲ್ ಮೇಲೆ ಕೇಳಿಬಂದಿರುವ ಆರೋಪದ ಬಗ್ಗೆ ಎಸ್ಐಟಿ ರಚನೆ ಮಾಡಿದೆ. ಎಸ್ಐಟಿ ಆ ಬಗ್ಗೆ ತನಿಖೆ ಕೈಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರೇವಣ್ಣ ಅವರ ಬಗ್ಗೆ ಅನುಕಂಪ ವ್ಯಕ್ತಪಡಿಸಿರುವುದು ಸಹಜ. ರಾಜಕೀಯವಾಗಿ ಒಬ್ಬರಿಗೊಬ್ಬರು ಮಾತನಾಡುವಾಗ ಟೀಕೆ, ಟಿಪ್ಪಣಿಗಳು ಸಾಮಾನ್ಯ.
|
5 |
+
ರೇವಣ್ಣ ಅವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವಂತಾಯಿತಲ್ಲ ಎಂದು ಅವರ ಮನಸ್ಸಿನಲ್ಲೂ ನೋವಿರಬಹುದು. ಈ ವಿಚಾರ ರಾಜ್ಯದ ಜನತೆಗೂ, ರಾಜಕಾರಣಿಗಳಿಗೂ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೂ ಗೊತ್ತಿದೆ. ಎಸ್ಐಟಿ ಮೂಲಕ ರೇವಣ್ಣ ಅವರನ್ನು ಬಂಧಿಸಿದ್ದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ ಎಂದರು.
|
6 |
+
ಜೈಲಿನಲ್ಲಿದ್ದಾಗ ರೇವಣ್ಣ ಅವರನ್ನು ಭೇಟಿ ಮಾಡಿದ್ದೆ. ಆಗ ಅವರು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ದೇವರು ಯಾವ ದಾರಿ ತೋರುತ್ತಾರೋ ನೋಡೋಣ ಎಂದು ಹೇಳಿದ್ದರು. ಜೈಲಿನಿಂದ ಬಿಡುಗಡೆಯಾದ ನಂತರ ಅವರು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಜಿ.ಟಿ.ದೇವೇಗೌಡರು ತಿಳಿಸಿದರು.ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಿದ್ದು, ದೇವೇಗೌಡರಿಂದ ಬಿ ಫಾರಂ ಪಡೆಯಲಾಗಿದೆ ಎಂದು ಹೇಳಿದರು.
|
eesanje/url_46_145_9.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಡಿಸಿಎಂ ಡಿಕೆಶಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಉಪರಾಷ್ಟ್ರಪತಿ ಧನ್ಕರ್
|
2 |
+
ಬೆಂಗಳೂರು,ಮೇ 15-ಕೆಪಿಸಿಸಿ ಅಧ್ಯಕ್ಷರು ಹಾಗು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಭಾರತದ ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಅವರು ಜನದಿನದ ಶುಭಾಶಯ ಕೋರಿದ್ದಾರೆ.
|
3 |
+
ಉಪರಾಷ್ಟ್ರಪತಿಗಳು ಡಿ.ಕೆ.ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದರು. ಜತೆಗೆ ಅವರಿಗೆ ಶುಭಾಶಯ ಪತ್ರವನ್ನೂ ಬರೆದಿದ್ದಾರೆ.ಡಿ.ಕೆ. ಶಿವಕುಮಾರ್ ಅವರಿಗೆ ಜನದಿನದ ಶುಭಾಶಯಗಳು. ದೇಶದ ಸೇವೆಗೆ ಜೀವನವನ್ನು ಮುಡಿಪಾಗಿಟ್ಟಿರುವ ತಮಗೆ ದೇವರು ಸಂತೋಷ, ಆರೋಗ್ಯ ಹಾಗೂ ಸುದೀರ್ಘ ಲಪ್ರದಾಯಕ ಜೀವನವನ್ನು ನೀಡಲಿ ಎಂದು ಜಗದೀಪ್ ಧನ್ಕರ್ ಅವರು ಪತ್ರದ ಮೂಲಕ ಹಾರೈಸಿದ್ದಾರೆ.
|
4 |
+
ಉಪರಾಷ್ಟ್ರಪತಿಗಳ ಶುಭಕಾಮನೆಗೆ ಧನ್ಯವಾದ ತಿಳಿಸಿ ಶಿವಕುಮಾರ್ ಅವರು ಕೂಡ ಪತ್ರ ಬರೆದಿದ್ದು, ನನ್ನ ಜನದಿನದ ಅಂಗವಾಗಿ ನಿಮ ಶುಭಾಶಯ ಪಡೆದು ಸಂತೋಷವಾಗಿದೆ. ನಿಮ ಬಿಡುವಿಲ್ಲದ ವೇಳಾಪಟ್ಟಿ ನಡುವೆ ನೀವು ನನ್ನನ್ನು ನೆನಪಿಸಿಕೊಂಡು ಶುಭಾಶಯ ಕೋರಿದ್ದೀರಿ.
|
5 |
+
ನಿಮ ನಿರೀಕ್ಷೆಯಂತೆ ನನ್ನ ಜೀವನವನ್ನು ಜನ ಸೇವೆಗೆ ಮುಡುಪಿಡುತ್ತೇನೆ. ಇದಕ್ಕೆ ನಿಮ ಆಶೀರ್ವಾದವನ್ನು ಬಯಸುತ್ತೇನೆ ಎಂದು ಶಿವಕುಮಾರ್ ಅವರು ತಿಳಿಸಿದ್ದಾರೆ.
|