e2a7e65db63ed3c4245d2976764cc55d53cf5a8cecb479a66c525dec082214de
Browse files- eesanje/url_46_229_12.txt +7 -0
- eesanje/url_46_229_2.txt +5 -0
- eesanje/url_46_229_3.txt +8 -0
- eesanje/url_46_229_4.txt +12 -0
- eesanje/url_46_229_5.txt +6 -0
- eesanje/url_46_229_6.txt +11 -0
- eesanje/url_46_229_7.txt +10 -0
- eesanje/url_46_229_8.txt +5 -0
- eesanje/url_46_229_9.txt +10 -0
- eesanje/url_46_22_1.txt +10 -0
- eesanje/url_46_22_10.txt +13 -0
- eesanje/url_46_22_11.txt +10 -0
- eesanje/url_46_22_12.txt +7 -0
- eesanje/url_46_22_2.txt +7 -0
- eesanje/url_46_22_3.txt +9 -0
- eesanje/url_46_22_4.txt +6 -0
- eesanje/url_46_22_5.txt +6 -0
- eesanje/url_46_22_6.txt +12 -0
- eesanje/url_46_22_7.txt +9 -0
- eesanje/url_46_22_8.txt +15 -0
- eesanje/url_46_22_9.txt +7 -0
- eesanje/url_46_230_1.txt +6 -0
- eesanje/url_46_230_10.txt +7 -0
- eesanje/url_46_230_11.txt +5 -0
- eesanje/url_46_230_12.txt +7 -0
- eesanje/url_46_230_2.txt +5 -0
- eesanje/url_46_230_3.txt +6 -0
- eesanje/url_46_230_4.txt +8 -0
- eesanje/url_46_230_5.txt +6 -0
- eesanje/url_46_230_6.txt +6 -0
- eesanje/url_46_230_7.txt +10 -0
- eesanje/url_46_230_8.txt +6 -0
- eesanje/url_46_230_9.txt +10 -0
- eesanje/url_46_231_1.txt +5 -0
- eesanje/url_46_231_10.txt +5 -0
- eesanje/url_46_231_11.txt +8 -0
- eesanje/url_46_231_12.txt +7 -0
- eesanje/url_46_231_2.txt +7 -0
- eesanje/url_46_231_3.txt +5 -0
- eesanje/url_46_231_4.txt +6 -0
- eesanje/url_46_231_5.txt +7 -0
- eesanje/url_46_231_6.txt +8 -0
- eesanje/url_46_231_7.txt +6 -0
- eesanje/url_46_231_8.txt +6 -0
- eesanje/url_46_231_9.txt +8 -0
- eesanje/url_46_232_1.txt +11 -0
- eesanje/url_46_232_10.txt +6 -0
- eesanje/url_46_232_11.txt +5 -0
- eesanje/url_46_232_12.txt +9 -0
- eesanje/url_46_232_2.txt +7 -0
eesanje/url_46_229_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಸಭೆ ಸ್ಥಾನ ಗೆಲ್ಲಲು ಬಿಜೆಪಿ-ಜೆಡಿಎಸ್ ರಣತಂತ್ರ
|
2 |
+
ಬೆಂಗಳೂರು,ಫೆ.21- ಕರ್ನಾಟಕದಲ್ಲಿ ರಾಜ್ಯಸಭಾ ಚುನಾವಣೆ ರಂಗು ಪಡೆದು ಕೊಂಡಿದೆ. ನಾಲ್ಕನೇ ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್ ಹಾಗೂ ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಭಾರೀ ರಣತಂತ್ರ ರೂಪಿಸುತ್ತಿವೆ. ಇದರ ನಡುವೆಯೇ ರಾಜ್ಯ ವಿಧಾನಸಭೆ ಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದಿರುವ ಚುನಾವಣಾ ಕಣದಲ್ಲಿರುವ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನ ನಡೆಸುವಂತೆ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಇದು ಈಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
|
3 |
+
ಜೆಪಿಯಿಂದ ಸ್ರ್ಪಧಿಸಿರುವ ನಾರಾಯಣ ಸಾ ಭಾಂಡಗೆ ಹಾಗೂ ಜೆಡಿಎಸ್ನಿಂದ ಕಣದಲ್ಲಿರುವ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ಸಾಧ್ಯವಿರುವ ಎಲ್ಲ ಪ್ರಯತ್ನ ನಡೆಸಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ, ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಒಂದು ಸ್ಥಾನದಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಗಿದ್ದು, ನಂಬರ್ ಲೆಕ್ಕಾಚಾರ ಗಮನಿಸಿದರೆ ಮೈತ್ರಿಯ ಎರಡನೇ ಅಭ್ಯರ್ಥಿ ಗೆಲುವಿಗೆ ನಾಲ್ಕು ಮತಗಳು ಕಡಿಮೆಯಾಗಲಿವೆ. ಆದರೂ ಕೂಡ ಬಿಜೆಪಿ ಹೈಕಮಾಂಡ್ ಕುಪೇಂದ್ರ ರೆಡ್ಡಿ ಗೆಲುವಿಗೆ ಎಲ್ಲ ಪ್ರಯತ್ನ ನಡೆಸಿ ಎಂದು ಸೂಚಿಸಿರುವುದು ಕುದುರೆ ವ್ಯಾಪಾರದ ಸಾಧ್ಯತೆಯನ್ನು ಹೆಚ್ಚಿಸಿದೆ.
|
4 |
+
ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಪ್ರತಿ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯ ಇದೆ. ಕಾಂಗ್ರೆಸ್ನಲ್ಲಿ 135 ಶಾಸಕರು, ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಇದ್ದು, 137 ಮತಗಳಾಗಲಿವೆ. ದರ್ಶನ್ ಪುಟ್ಟಣ್ಣಯ್ಯ ಅವರ ಮತ ಕೂಡ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೀಳುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ 66 ಹಾಗೂ ಜೆಡಿಎಸ್ 19 ಹಾಗೂ ಜನಾರ್ದನ ರೆಡ್ಡಿ ಅವರ ಒಂದು ಮತ ಸೇರಿ 86 ಮತಗಳು ಆಗಲಿವೆ. ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗೆ ನಾಲ್ಕು ಮತಗಳು ಕಡಿಮೆಯಾಗಲಿವೆ.
|
5 |
+
ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ : ಸಿದ್ದರಾಮಯ್ಯ
|
6 |
+
ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಬಿಜೆಪಿ ನಾಯಕರು ಹಾಗೂ ಎಚ್.ಡಿ. ಕುಮಾರಸ್ವಾಮಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 6 ರಿಂದ 7 ಶಾಸಕರ ಜೊತೆ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಹೇಳಿದ್ದು, ನಮ್ಮ ಪಕ್ಷದ ಶಾಸಕರಿಗೆ ಕುಮಾರಸ್ವಾಮಿ ಆಫರ್ ನೀಡುವ, ಧಮಕಿ ಹಾಕುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಯಾರಿಗೆಲ್ಲಾ ಫೋನ್ ಮಾಡಿ, ಏನೇನು ಮಾತನಾಡುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ.
|
7 |
+
ಸಂಬಂಧಪಟ್ಟ ಶಾಸಕರೇ ಮಾಹಿತಿ ತಲುಪಿಸುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಕುಮಾರಸ್ವಾಮಿ ಮಾತ್ರವಲ್ಲ, ಅವರ ಮಿತ್ರಪಕ್ಷ ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ ಎಂದು ಹೇಳಿದ್ದಾರೆ. ಇದರಿಂದ ರಾಜ್ಯಸಭೆಯಲ್ಲಿ ಕುದುರೆ ವ್ಯಾಪಾರ ನಡೆದು ಅಡ್ಡಮತದಾನ ನಡೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಕಾಂಗ್ರೆಸ್ನ ಅಸಮಾಧಾನಿತ ಶಾಸಕರನ್ನು ತಮ್ಮತ್ತ ಸೆಳೆಯುವ ಪ್ರಯತ್ನವನ್ನು ಮೈತ್ರಿ ನಾಯಕರು ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡುತ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಇದೆ.
|
eesanje/url_46_229_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟ
|
2 |
+
ಬೆಂಗಳೂರು,ಫೆ.21- ದ್ವಿತೀಯ ಪಿಯುಸಿ ಪರೀಕ್ಷೆ ಮಾ.1 ರಿಂದ ಮಾ.22 ರವರೆಗೆ ಹಾಗು ಎಸ್ಎಸ್ಎಲ್ಸಿ ಪರೀಕ್ಷೆ ಮಾ.25ರಿಂದ ಏ.6ವರೆಗೆ ನಡೆಯಲಿದೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಗಾಗಲೆ ಸಿದ್ದತೆ ಆರಂಭಗೊಂಡಿದ್ದು ಶಾಲಾ.ಕಾಲೇಜುಗಳಲ್ಲಿ ಪೋರಕ ಪರೀಕ್ಷೆ ಆರಂಭಗೊಂಡಿದೆ.
|
3 |
+
ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್ಎಸ್ಎಲ್ಸಿ ಪರೀಕ್ಷೆಗೆ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ದ್ವಿತೀಯ ಪಿಯುಸಿಗೆ ರಾಜ್ಯಾದ್ಯಂತ 1124 ಪರೀಕ್ಷಾ ಕೇಂದ್ರಗಳನ್ನು ಗುರುತ್ತಿಸಲಾಗಿದ್ದು ಎಸ್ಎಸ್ಎಲ್ಸಿ ಗೆ 2747 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದ್ರೂ ಒಂದು ಪರೀಕ್ಷೆಗೆ ಹಾಜರಾಗಬೇಕುಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು.
|
4 |
+
ಮಾಡೆಲ್ ಆತ್ಮಹತ್ಯೆ ; ಕ್ರಿಕೆಟಿಗ ಅಭಿಷೇಕ್ ಶರ್ಮಾಗೆ ಸಮನ್ಸ್
|
5 |
+
ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾಕ್ಸರ್ï ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾಕ್ಸರ್ï ಮಾತ್ರ ತೆಗೆದುಕೊಳ್ಳಲಾಗುವುದು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡಿರುತ್ತದೆ ಒಟ್ಟಾರೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿ ಲಾಕರ್ ನಿಂದ ಪಡೆಯಬಹುದಾಗಿರುತ್ತದೆ ಎಂದು ತಿಳಿಸಿದರು.
|
eesanje/url_46_229_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಸಭೆ ಚುನಾವಣೆ : ಕೈ ಶಾಸಕರು ರೆಸಾರ್ಟ್ಗೆ
|
2 |
+
ಬೆಂಗಳೂರು,ಫೆ.21- ರಾಜ್ಯಸಭಾ ಚುನಾವಣಾ ಕಣ ರಂಗೇರಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ತನ್ನ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ರಣತಂತ್ರ ರೂಪಿಸಿದ್ದು ತಮ್ಮ ಪಕ್ಷದ ಶಾಸಕರನ್ನು ರೆಸಾರ್ಟ್ಗೆ ನಿಯೋಜನೆ ಮಾಡಲು ಸಿದ್ಧತೆ ನಡೆಸಿದೆ. ಫೆ.27 ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಅಡ್ಡ ಮತದಾನ ತಡೆಗಟ್ಟುವ ನಿಟ್ಟಿ ನಲ್ಲಿ ಹಿಂದಿನ ದಿನ ಕಾಂಗ್ರೆಸ್ ಖಾಸಗಿ ರೆಸಾರ್ಟ್ನಲ್ಲಿ ಶಾಸಕರಿಗೆ ಸಭೆ ಆಯೋಜಿಸಿದೆ. ಅಲ್ಲಿ ವ್ಹಿಪ್ ಜಾರಿಗೊಳಿಸುವ ಸಾಧ್ಯತೆ ಇದೆ.
|
3 |
+
ಜೆಡಿಎಸ್ ಪಕ್ಷ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕಿಳಿಸಿರುವುದರಿಂದ ರಾಜ್ಯಸಭಾ ಚುನಾವಣೆ ಅಖಾಡ ತೀವ್ರ ಕುತೂಹಲ ಕೆರಳಿಸಿದ್ದು, ಅಡ್ಡ ಮತದಾನದ ಭೀತಿ ಎದುರಾಗಿದೆ. ಅಡ್ಡ ಮತದಾನವಾಗಿ ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗೆ ಸೋಲಾದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಆತಂಕ ಎದುರಾಗಿದೆ. ಹೀಗಾಗಿ ಎಲ್ಲಾ ಶಾಸಕರನ್ನು ಒಗ್ಗಟ್ಟಿನಲ್ಲಿಡಲು ರೆಸಾರ್ಟ್ ಸಭೆ ನಡೆಸಲು ಮುಂದಾಗಿದ್ದು, ಅಧಿವೇಶನ ಮುಗಿಯುತ್ತಿದ್ದಂತೆ ಎಲ್ಲಾ ಶಾಸಕರೂ ರೆಸಾರ್ಟ್ಗೆ ತೆರಳಲಿದ್ದಾರೆ. ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಕೇನ್ ಇಂದು ವಿಧಾನಸಭೆಯ ಮೊಗಸಾಲೆಗೆ ಬಂದು ತಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ ಮತ ಯಾಚನೆ ಮಾಡಿದರು.
|
4 |
+
ಕಾಂಗ್ರೆಸ್ನಿಂದ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಅವರೂ ಕೂಡ ಮತ ಯಾಚಿಸುತ್ತಿದ್ದಾರೆ. ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ನಾಲ್ವರು ಅಭ್ಯರ್ಥಿಗಳಿದ್ದಿದ್ದರೆ ಅವಿರೋಧ ಆಯ್ಕೆ ನಡೆಯುತ್ತಿತ್ತು. ಆದರೆ ಐವರು ಅಭ್ಯರ್ಥಿಗಳಿರುವುದರಿಂದ ಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರೂ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೈತ್ರಿ ಮಾಡಿಕೊಂಡಿರುವ ಜೆಡಿಎಸ್-ಬಿಜೆಪಿ ತಮ್ಮ ಅಭ್ಯರ್ಥಿಗಳ ಗೆಲುವಿಗೆ ರಣತಂತ್ರ ರೂಪಿಸಿದ್ದು, ತಮ್ಮ ಶಾಸಕರ ಮತಗಳು ಚದುರದಂತೆ ಎಚ್ಚರಿಕೆ ವಹಿಸಿವೆ.
|
5 |
+
ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ
|
6 |
+
ಈ ನಡುವೆ ಕೆಲ ಶಾಸಕರು ಅನುದಾನ ಹಂಚಿಕೆ ವಿಷಯದಲ್ಲಿ ಅಸಮಾಧಾನಗೊಂಡಿದ್ದು, ಅವರನ್ನು ಗುರುತಿಸಿ ಯಾವುದೇ ಕಾರಣಕ್ಕೂ ಚುನಾವಣೆ ಸಂದರ್ಭದಲ್ಲಿ ಗೈರು ಹಾಜರಾಗದಂತೆ ಎಚ್ಚರಿಕೆ ವಹಿಸಲು ಕೆಲವು ಹಿರಿಯ ನಾಯಕರನ್ನು ಅವರ ಚಲನವಲನದ ಬಗ್ಗೆ ನಿಗಾ ಇಡಲು ವರಿಷ್ಠ ನಾಯಕರು ಸೂಚಿಸಿದ್ದಾರೆ.
|
7 |
+
“ನಾನೂ ಶೂದ್ರ-ನೀವೂ ಶೂದ್ರರು ಯಾಕ್ರೀ ಇದೆಲ್ಲಾ..”
|
8 |
+
ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಂಗ ಪ್ರವೇಶಿಸಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಶಾಸಕರ ಮತಗಳು ವ್ಯರ್ಥವಾ���ಬಾರದೆಂದು ರಾಜ್ಯ ನಾಯಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಈಗಾಗಲೇ ಶಿಕ್ಷಕರ ಕ್ಷೇತ್ರವನ್ನು ಗೆದ್ದಿದ್ದು, ಈಗ ರಾಜ್ಯಸಭೆಯಲ್ಲೂ ಕೂಡ ನಮ್ಮ ಮೂವರು ಅಭ್ಯರ್ಥಿಗಳು ಗೆಲುವಿಗೆ ಏನೆಲ್ಲ ಕಾರ್ಯತಂತ್ರ ನಡೆಸಬೇಕೋ ಅದರ ಬಗ್ಗೆ ಮುತುವರ್ಜಿ ವಹಿಸುವಂತೆ ಸೂಚಿಸಿದ್ದಾರೆ. ಫೆ.27 ರಂದು ಮತದಾನ ನಡೆಯಲಿದ್ದು, ಪಕ್ಷೇತರರು ಯಾವ ಕಡೆ ವಾಲಲಿದ್ದಾರೆ, ಯಾವ ಪಕ್ಷದವರು ಅಡ್ಡ ಮತದಾನ ಮಾಡಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
|
eesanje/url_46_229_4.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ನಾಡಗೀತೆ ವಿವಾದ ವಿಧಾನಸಭೆಯಲ್ಲಿ ಪ್ರತಿಧ್ವನಿ
|
2 |
+
ಬೆಂಗಳೂರು,ಫೆ.21- ಸರ್ಕಾರಿ ಶಾಲೆಗಳಲ್ಲಿ ನಾಡಗೀತೆ ಹಾಡುವುದಕ್ಕೆ ಸಂಬಂಧಪಟ್ಟಂತೆ ಸರ್ಕಾರದ ದೋಷಪೂರಿತ ಆದೇಶದ ವಿರುದ್ಧ ವಿರೋಧಪಕ್ಷಗಳು ವಿಧಾನಸಭೆಯಲ್ಲಿಂದು ಕಿಡಿಕಾರಿದ್ದು, ಸರ್ಕಾರ ತಿದ್ದುಪಡಿ ಆದೇಶ ಹೊರಡಿಸಲಾಗಿದೆ ಎಂದು ಸಮರ್ಥಿಸಿಕೊಂಡಿದೆ.
|
3 |
+
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ಬಳಿಕ ಬೇರೆ ಬೇರೆ ಕಲಾಪಗಳು ನಡೆಯುತ್ತಿರುವ ನಡುವೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಷಯ ಪ್ರಸ್ತಾಪಿಸಿ, ಈ ಸರ್ಕಾರ ಕುವೆಂಪು ಅವರಿಗೆ ಪದೇಪದೇ ಅಪಮಾನ ಮಾಡುತ್ತಿದೆ. ಮೊನ್ನೆ ವಸತಿ ಶಾಲೆಗಳಲ್ಲಿ ಕುವೆಂಪು ಅವರ ಬರಹವನ್ನು ಬದಲಾವಣೆ ಮಾಡಿತ್ತು. ಗಲಾಟೆಯಾದ ಬಳಿಕ ತಪ್ಪನ್ನು ಸರಿಪಡಿಸುವುದಾಗಿ ಹೇಳಿದೆ. ಈಗ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಆದೇಶ ಹೊರಡಿಸಿದೆ.
|
4 |
+
ಖಾಸಗಿ ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆಗಳಿಗೆ ನಿಯಂತ್ರಣ ಸಂಸ್ಥೆ, ಶಿಕ್ಷಣ ನೀತಿಯ ಪ್ರಕಾರವೇ ಎಲ್ಲಾ ಶಾಲೆಗಳು ಸರ್ಕಾರದಿಂದ ಬೇರೆ ಬೇರೆ ಅನುಕೂಲ ಪಡೆದುಕೊಳ್ಳುತ್ತವೆ. ಆದ್ದರಿಂದ ನಾಡಗೀತೆಯಿಂದ ಖಾಸಗಿ ಶಾಲೆಗಳಿಗೆ ವಿನಾಯಿತಿ ನೀಡುವ ಅಗತ್ಯವೇನಿದೆ? ಇದು ತುಘಲಕ್ ದರ್ಬಾರಾಗಿದೆ. ಅಧಿಕಾರಿಗಳು ಮತ್ತು ಸಚಿವರ ನಡುವೆ ಸಂಬಂಧ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.
|
5 |
+
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಲಂಗೂ ಲಗಾಮು ಇಲ್ಲದಂತಾಗಿದೆ. ದೋಷಪೂರಿತ ಆದೇಶಕ್ಕಾಗಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು. ಶಾಸಕರಾದ ಸುರೇಶ್ಕುಮಾರ್, ಅರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್ ಮತ್ತಿತರರು ಸರ್ಕಾರದ ವಿರುದ್ಧ ಕಿಡಿಕಾರಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉತ್ತರ ನೀಡಿ, ಈ ಹಿಂದಿನ ಸರ್ಕಾರ ಮೈಸೂರು ಅನಂತಸ್ವಾಮಿ ಅವರ ಧಾಟಿಯಲ್ಲಿ ನಾಡಗೀತೆ ಹಾಡಬೇಕು ಎಂದು ಸರ್ಕಾರಿ ಆದೇಶ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಸಿ.ಅಶ್ವತ್ಥ್ ಅವರ ಧಾಟಿಯಲ್ಲಿ ನಾಡಗೀತೆ ಹಾಡಲು ಆದೇಶಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು.
|
6 |
+
ಈ ಪ್ರಕರಣದ ವಿಚಾರಣೆ ವೇಳೆ ಈ ಹಿಂದಿನ ಆದೇಶದಲ್ಲಿದ್ದಂತೆ ಎಲ್ಲಾ ಶಾಲೆಗಳು ಎಂದರೆ ಯಾವುವು ಎಂದು ವಕೀಲರು ಪ್ರಶ್ನೆಯೆತ್ತಿದರು. ಅದನ್ನು ಸರಿಪಡಿಸಲು ಇದೇ ವರ್ಷದ ಫೆ.16 ರಂದು ಹೊರಡಿಸಲಾಗಿದ್ದ ಆದೇಶದಲ್ಲಿ ರಾಷ್ಟ್ರಕವಿ ಜ್ಞಾನಪೀಠ ಪುರಸ್ಕøತರಾದ ಡಾ.ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ 2024 ರ ಫೆ.1 ರ ಆದೇಶವನ್ನು ತಿದ್ದುಪಡಿ ಮಾಡಲಾಗಿದೆ.
|
7 |
+
ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ನಿಗಮ, ���ಂಡಳಿ, ಪ್ರಾಧಿಕಾರ, ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳಲ್ಲಿ ಹಾಡುವುದು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ನಿಗಮ, ಮಂಡಳಿ, ಪ್ರಾಧಿಕಾರ, ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮದ ಪ್ರಾರಂಭದಲ್ಲಿ ಹಾಡಬೇಕೆಂಬುದನ್ನು ಬದಲಾಯಿಸಲಾಗಿತ್ತು ಎಂದರು.
|
8 |
+
ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ
|
9 |
+
ಈ ಆದೇಶ ಕುರಿತಂತೆ ತಯಾರಿಸಲಾದ ಟಿಪ್ಪಣಿಯಲ್ಲಿ ಖಾಸಗಿ ಶಾಲೆ ಎಂದು ಸೇರ್ಪಡೆ ಮಾಡಲಾಗಿದೆ. ಆದರೆ ಆದೇಶದಲ್ಲಿ ಈ ಪದ ಮುದ್ರಣ ದೋಷದಿಂದಾಗಿ ಕೈ ಬಿಟ್ಟು ಹೋಗಿದೆ, ಅದನ್ನು ಸರಿಪಡಿಸಿ ಮತ್ತೊಮ್ಮೆ ತಿದ್ದುಪಡಿ ಆದೇಶವನ್ನು ಹೊರಡಿಸಿದ್ದೇವೆ ಎಂದು ಹೇಳಿದರು. ಕನ್ನಡ ಕಾಳಜಿಯ ಬಗ್ಗೆ ವಿರೋಧ ಪಕ್ಷಗಳಿಂದ ನಾವು ಪಾಠ ಕಲಿಯಬೇಕಿಲ್ಲ. ಈ ಹಿಂದೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಬಿಜೆಪಿ ಸರ್ಕಾರ ಪ್ರಶಸ್ತಿಯನ್ನೇ ನೀಡಿರಲಿಲ್ಲ. ನಾವು ಬಂದು ಪ್ರಶಸ್ತಿ ನೀಡಿದ್ದೇವೆ ಎಂದು ತಿರುಗೇಟು ನೀಡಿದರು.
|
10 |
+
ಅಷ್ಟಕ್ಕೇ ತೃಪ್ತರಾಗದ ವಿರೋಧ ಪಕ್ಷದ ನಾಯಕರು ಸರ್ಕಾರ ಪದೇ ಪದೇ ಈ ರೀತಿಯ ಲೋಪಗಳನ್ನು ಮಾಡುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು.ನ್ಯಾಯಾಲಯದ ವಿಚಾರ ಪ್ರಸ್ತಾಪವಾಗಿರುವುದರಿಂದ ಕಾನೂನು ಸಚಿವ ಉತ್ತರ ನೀಡಬೇಕೆಂದು ಆರ್.ಅಶೋಕ್ ಒತ್ತಾಯಿಸಿದರು.
|
11 |
+
ಫೆ.26, 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ
|
12 |
+
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಧ್ಯಪ್ರವೇಶ ಮಾಡಿ, ವಿರೋಧ ಪಕ್ಷದ ನಾಯಕರು ವಿಷಯ ಪ್ರಸ್ತಾಪಿಸುವ ಮೊದಲೇ ನಮ್ಮ ಪಕ್ಷದವರು ಜಾಗೃತರಾಗಿ ತಪ್ಪನ್ನು ಸರಿಪಡಿಸಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಎಂಬುದನ್ನು ಸರಿಪಡಿಸಲಾಗಿದೆ. ಆದೇಶದಲ್ಲಿ ಮುದ್ರಣ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ವಿಚಾರ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿಗೂ ಕಾರಣವಾಗಿತ್ತು.
|
eesanje/url_46_229_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬಿಜೆಪಿ-ಜೆಡಿಎಸ್ ಸದಸ್ಯರ ಸಭಾತ್ಯಾಗ
|
2 |
+
ಬೆಂಗಳೂರು,ಫೆ.21- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತರದಿಂದ ತೃಪ್ತರಾಗದ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಪರಿಷತ್ನಲ್ಲಿ ಸಭಾತ್ಯಾಗ ಮಾಡಿದರು. ರಾಜ್ಯಪಾಲರ ಭಾಷಣಕ್ಕೆ ಸುದೀರ್ಘ ಉತ್ತರ ನೀಡಿದ ಸಿದ್ದರಾಮಯ್ಯನವರು, ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆ ಹೇಳಿದ್ದರು. ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಮಗೆ ಮಾತನಾಡಲು ಅವಕಾಶ ಕೊಡಬೇಕೆಂದು ಮನವಿ ಮಾಡಿದರು.
|
3 |
+
ಮುಖ್ಯಮಂತ್ರಿಗಳು ಮಾತನಾಡುವ ವೇಳೆ ಪದೇ ಪದೇ ಎದ್ದುನಿಂತು ಭಾಷಣಕ್ಕೆ ಅಡ್ಡಿಪಡಿಸಿದ್ದೀರಿ. ಪುನಃ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೊರಟ್ಟಿ ಹೇಳುತ್ತಿದ್ದಂತೆ, ತೀವ್ರ ಆಕ್ಷೇಪ ವ್ಯಕ್ತವಾಯಿತು. ಮುಖ್ಯಮಂತ್ರಿಯವರು ಸತತ 3 ಗಂಟೆ ಉತ್ತರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆಯೂ ಮಾತನಾಡಿದ್ದಾರೆ. ಇದು ಸಂಪೂರ್ಣವಾಗಿ ಚುನಾವಣಾ ಪ್ರಚಾರ ಭಾಷಣವಾಗಿದೆ. ಕೇವಲ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರಮೋದಿ ಮತ್ತು ಬಿಜೆಪಿಯನ್ನುಗುರಿಯಾಗಿಟ್ಟುಕೊಂಡು ಟೀಕೆ ಮಾಡಿದ್ದಾರೆ. ನಾವು ಮಾತನಾಡಿದರೆ ತಪ್ಪು ಸಂದೇಶ ಹೋಗುತ್ತದೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಮನವಿ ಮಾಡಿದರು.
|
4 |
+
ಅವರು ರಾಜ್ಯಪಾಲರ ಭಾಷಣಕ್ಕೆ ಉತ್ತರ ಕೊಟ್ಟಿದ್ದರೆ ನಮ್ಮದೇನು ತಕರಾರು ಇರುತ್ತಿರಲಿಲ್ಲ. ಕೇವಲ ಕೇಂದ್ರವನ್ನು ಗುರಿಯಾಗಿಟ್ಟುಕೊಂಡು ಟೀಕೆ ಮಾಡಿದ್ದರ ನಾವು ಅದನ್ನು ಸಹಿಸಿಕೊಂಡು ಸುಮ್ಮನಿರಬೇಕಾ? ಮಾತನಾಡಲು ಅವಕಾಶ ಕೊಡಿ ಎಂದು ಆಗ್ರಹಿಸಿದರು. ಈ ಹಂತದಲ್ಲಿ ಆಡಳಿತ, ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಆರೋಪ, ಪ್ರತ್ಯಾರೋಪಗಳು ನಡೆದವು. ಮುಖ್ಯಮಂತ್ರಿಗಳ ಪರವಾಗಿ ಭೋಸರಾಜ್, ಸಚಿವರು ಹಾಗೂ ಕಾಂಗ್ರೆಸ್ ಸದಸ್ಯರು ಬೆಂಬಲವಾಗಿ ನಿಂತರು.
|
5 |
+
ಸರ್ಕಾರದಿಂದ ಕಂದಾಯ ವೆಚ್ಚ ದುರ್ಬಳಕೆ : ಬೊಮ್ಮಾಯಿ ಆರೋಪ
|
6 |
+
ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ನಾವು ಸುಮ್ಮನೆ ಕೂರಬೇಕೇ? ಮುಖ್ಯಮಂತ್ರಿಗಳು ಸತ್ಯವನ್ನೇ ಹೇಳಿದ್ದಾರೆ. ಪುನಃ ಪ್ರತಿಪಕ್ಷದವರು ಮಾತನಾಡುವುದರಲ್ಲಿ ಏನು ಅರ್ಥವಿದೆ. ಈಗಾಗಲೇ ಮುಖ್ಯಮಂತ್ರಿಗಳು ಉತ್ತರ ಕೊಟ್ಟಿರುವುದರಿಂದ ಪುನಃ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಪೀಠಕ್ಕೆ ಮನವಿ ಮಾಡಿದರು. ಈ ಹಂತದಲ್ಲಿ ಎರಡು ಕಡೆ ಗದ್ದಲ ಪ್ರಾರಂಭವಾಯಿತು. ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಕೂಗಿ ಸಭಾ ತ್ಯಾಗ ಮಾಡಿದರೆ, ಕಾಂಗ್ರೆಸ್ ಸದಸ್ಯರು ನಮ್ಮ ತೆರಿಗೆ ನಮ್ಮ ಹಕ್ಕು, ಕನ್ನಡಿಗರ ದ್ರೋಹಿಗಳು ಬಿಜೆಪಿಯವರು ಎಂದು ಘೋಷಣೆ ಕೂಗಿದರು.
|
eesanje/url_46_229_6.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹೋಟೆಲ್ಗಳಲ್ಲಿನ ಅನೈತಿಕ ಚಟುವಟಿಕೆಗಳ ವಿರುದ್ಧ ಪೊಲೀಸರು-ಓವೈಓ ಜಂಟಿ ಅಭಿಯಾನ
|
2 |
+
ಬೆಂಗಳೂರು, ಫೆ. 21- ಹೋಟೆಲ್ಗಳಲ್ಲಿನ ಅನೈತಿಕ ಚಟುವಟಿಕೆಗಳ ವಿರುದ್ಧ ನಗರ ಪೊಲೀಸರು ಮತ್ತು ಓವೈಓ ಜಂಟಿ ಅಭಿಯಾನ ಕೈಗೊಂಡಿದೆ. ಓವೈಓ ನಂತಹ ಸಂಸ್ಥೆಗಳೊಂದಿಗೆ ಸಹಕರಿಸುವ ಮೂಲಕ, ನಾವು ಕಾನೂನುಬಾಹಿರ ಚಟುವಟಿಕೆಗಳನ್ನು ಉತ್ತಮವಾಗಿ ಗುರುತಿಸಬಹುದು ಮತ್ತು ಪರಿಹರಿಸಬಹುದು, ಅಂತಿಮವಾಗಿ ಎಲ್ಲರಿಗೂ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಬಹುದು ಎಂದು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಿ. ದೇವರಾಜ ಹೇಳಿದರು.
|
3 |
+
ಓವೈಓ ಸಹಭಾಗಿತ್ವದಲ್ಲಿ ಪೊಲೀಸ್ ಇಲಾಖೆ ನಗರದ ಹೋಟೆಲ್ಗಳಲ್ಲಿ ಮಾನವ ಕಳ್ಳಸಾಗಣೆ ಸೇರಿದಂತೆ ಅನೈತಿಕ ಚಟುವಟಿಕೆಗಳ ವಿರುದ್ಧದ ಹೋರಾಟದಲ್ಲಿ ವಿಶೇಷ ಅಭಿಯಾನವನ್ನು ಆಯೋಜಿಸಿದೆ. ಓವೈಓನ ಉನ್ನತ ಅಧಿಕಾರಿಗಳು ಹೋಟೆಲ್ ನಿರ್ವಾಹಕರೊಂದಿಗೆ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಿ. ದೇವರಾಜ ಅವರೊಂದಿಗೆ ಸಭೆ ನಡೆಸಿದರು.
|
4 |
+
ನಗರದ ಹೋಟೆಲ್ಗಳಲ್ಲಿ ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟಲು ಓವೈಓ ಪೊಲೀಸರಿಗೆ ತಮ್ಮ ಬೆಂಬಲವನ್ನು ನೀಡಿದರು. ಮಾನವ ಕಳ್ಳಸಾಗಣೆ, ಮಾದಕ ವ್ಯಸನ ಮತ್ತು ಹೋಟೆಲ್ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುವ ಕೆಲವು ನಿರ್ಲಜ್ಜ ಅಂಶಗಳೊಂದಿಗೆ ಸಂಬಂಧಿಸಿದ ಇತರ ಕಾನೂನುಬಾಹಿರ ಅಭ್ಯಾಸಗಳಂತಹ ಅನೈತಿಕ ಚಟುವಟಿಕೆಗಳನ್ನು ನಿಗ್ರಹಿಸುವ ಕಾರ್ಯತಂತ್ರಗಳ ಕುರಿತು ಅವರು ಈ ಸಭೆಯಲ್ಲಿ ಚರ್ಚಿಸಿದರು.
|
5 |
+
ಓವೈಓ ತನ್ನ ಎಲ್ಲಾ ಅತಿಥಿಗಳಿಗೆ ಸುರಕ್ಷಿತ ವಾತಾವರಣವನ್ನು ಒದಗಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು ಮತ್ತು ತನ್ನ ಆವರಣದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಅಥವಾ ಅನೈತಿಕ ಚಟುವಟಿಕೆಗಳ ಬಗ್ಗೆ ತನ್ನ ಶೂನ್ಯ-ಸಹಿಷ್ಣು ನೀತಿಯನ್ನು ಪುನರುಚ್ಚರಿಸಿತು. ಈ ಜಂಟಿ ಚಾಲನೆಯ ಭಾಗವಾಗಿ, ಓವೈಓ ಮತ್ತು ನಗರ ಪೊಲೀಸರು ಯಾವುದೇ ಅನುಮಾನಾಸ್ಪದ ಅಥವಾ ಕಾನೂನುಬಾಹಿರ ಚಟುವಟಿಕೆಗಳನ್ನು ತ್ವರಿತವಾಗಿ ಗುರುತಿಸಲು ಮತ್ತು ಪರಿಹರಿಸಲು ಸಹಯೋಗ ಮತ್ತು ಮಾಹಿತಿ ಹಂಚಿಕೆಯನ್ನು ಹೆಚ್ಚಿಸಲು ಒಪ್ಪಿಕೊಂಡಿದ್ದಾರೆ.
|
6 |
+
ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ
|
7 |
+
ಈ ಪಾಲುದಾರಿಕೆಯು ಅದರ ಅತಿಥಿಗಳು ಮತ್ತು ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಓವೈಓ ನ ಪೂರ್ವಭಾವಿ ವಿಧಾನವನ್ನು ಒತ್ತಿಹೇಳುತ್ತದೆ. ಹೋಟೆಲ್ಗಳು ಎಲ್ಲಾ ಅತಿಥಿಗಳಿಗೆ ಸುರಕ್ಷಿತ ಮತ್ತು ಸ್ವಾಗತಾರ್ಹ ಸ್ಥಳಗಳಾಗಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಆತಿಥ್ಯ ಉದ್ಯಮದೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ. ಓವೈಓನಂತಹ ಸಂಸ್ಥೆಗಳೊಂದಿಗೆ ಸಹಕರಿಸುವ ಮೂಲಕ, ನಾವು ಕಾನೂನುಬಾಹಿರ ಚಟುವಟಿಕೆಗಳನ್ನು ಉತ್ತಮವಾಗಿ ಗುರುತಿಸಬಹುದು ಮತ್ತು ಪರಿಹರಿಸಬಹುದು, ಅಂತಿಮವಾಗಿ ಎಲ್ಲರಿಗ�� ಸುರಕ್ಷಿತ ವಾತಾವರಣವನ್ನು ಸೃಷ್ಟಿಸಬಹುದು ಎಂದರು.
|
8 |
+
ಹೊಟೇಲ್ಗೆ ಬರುವ ಅತಿಥಿಗಳ ಸರಿಯಾದ ದಾಖಲೆ ಇಟ್ಟುಕೊಳ್ಳುವುದು ಮುಖ್ಯವಾದರೂ, ನೈತಿಕ ಪೊಲೀಸ್ ಗಿರಿಯನ್ನು ಪ್ರೋತ್ಸಾಹಿಸಬಾರದು ಎಂದು ಅವರು ಹೇಳಿದರು. ಇದರ ಜೊತೆಗೆ, ಹೋಟೆಲ್ಗಳು ಆಸ್ತಿ ಮತ್ತು ನೆರೆಹೊರೆಯಲ್ಲಿ ಸಿಸಿಟಿವಿ ಕ್ಯಾಮೆರಾ ಸಾರ್ವಕಾಲಿಕ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
|
9 |
+
ಓವೈಓನ ಸ್ಟ್ರಾಟೆಜಿಕ್ ಅಲೈಯನ್ಸ್ ಮತ್ತು ಕಮ್ಯುನಿಕೇಷನ್ಸ್ ಮುಖ್ಯಸ್ಥ ನಿತಿನ್ ಠಾಕೂರ್ ಮಾತನಾಡುತ್ತಾ, ಈ ಸಭೆಯು ಪೊಲೀಸರೊಂದಿಗೆ ಸಹಕರಿಸಲು ಮತ್ತು ಹೊಟೇಲ್ಗಳಲ್ಲಿ ಅತಿಥಿಗಳಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ನಮ್ಮ ರಾಷ್ಟ್ರವ್ಯಾಪಿ ಕಾರ್ಯಕ್ರಮದ ಒಂದು ಭಾಗವಾಗಿದೆ. ಎಂದರು. ಓವೈಓ ತನ್ನ ಪ್ಲಾಟ್ ಫಾರ್ಮ್ ನಲ್ಲಿ ಪಟ್ಟಿ ಮಾಡಲಾದ ಹೋಟೆಲ್ ಗಳು ಸ್ಥಳೀಯ ಕಾನೂನು ಜಾರಿ ಏಜೆನ್ಸಿಗಳು ನೀಡಿದ ಸುರಕ್ಷತೆ ಸಂಬಂತ ಕಾನೂನುಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಖಚಿತಪಡಿಸಿಕೊಳ್ಳಲು ದೃಢವಾದ ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆಯನ್ನು ಹೊಂದಿದೆ.
|
10 |
+
ಒಕ್ಕೂಟ ವ್ಯವಸ್ಥೆಗೆ ಮೋದಿ ಅಪಾಯಕಾರಿ : ಸಿದ್ದು
|
11 |
+
ಅತಿಥಿ ನಡವಳಿಕೆ ಮತ್ತು ಅಸಾಮಾನ್ಯ ಚೆಕ್-ಇನ್ ಮಾದರಿಗಳಂತಹ ಕೆಂಪು ಧ್ವಜಗಳನ್ನು ವೀಕ್ಷಿಸಲು ಮತ್ತು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲು ಇದು ತನ್ನ ಹೋಟೆಲ್ ಪಾಲುದಾರರು ಮತ್ತು ಅವರ ಉದ್ಯೋಗಿಗಳಿಗೆ ನಿಯಮಿತ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಸಿದ ತರಬೇತಿಯನ್ನು ನೀಡುತ್ತದೆ ಎಂದು ಅವರು ಹೇಳಿದರು.
|
eesanje/url_46_229_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ : ಗೃಹಸಚಿವ ಪರಮೇಶ್ವರ್
|
2 |
+
ಬೆಂಗಳೂರು,ಫೆ.21-ಕೇರಳದ ಮಾದರಿಯಲ್ಲಿ ಅನಿವಾಸಿ ಭಾರತೀಯರ ಸಚಿವಾಲಯ ತೆರೆಯುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಗೆ ಭರವಸೆ ನೀಡಿದರು. ವಿಧಾನಸಭೆಯ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಆರತಿ ಕೃಷ್ಣ ಅವರ ನೇತೃತ್ವದಲ್ಲಿ 15ಕ್ಕೂ ಹೆಚ್ಚು ವಿವಿಧ ರಾಷ್ಟ್ರಗಳ ಅನಿವಾಸಿ ಭಾರತೀಯರು ಸದನದ ಕಾರ್ಯಕಲಾಪಗಳನ್ನು ವೀಕ್ಷಿಸುತ್ತಿರುವ ವಿಚಾರವನ್ನು ಸ್ವಾಗತಿಸಿ ಅವರು ಮಾತನಾಡಿದರು.
|
3 |
+
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆ ಸಿದ್ದಪಡಿಸುವಾಗ ಪ್ರತ್ಯೇಕ ಸಚಿವಾಲಯವನ್ನು ಮಾಡುವ ಬೇಡಿಕೆಯನ್ನು ಅನಿವಾಸಿ ಭಾರತೀಯರು ಇಟ್ಟಿದ್ದರು. ಅದರಂತೆ ಪ್ರಣಾಳಿಕೆಯಲ್ಲೂ ಆ ವಿಚಾರವನ್ನು ಸೇರಿಸಿದ್ದೆವು. ಅವರದೇ ಆದ ಸಮಸ್ಯೆಗಳಿರುತ್ತವೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತ್ಯೇಕ ಸಚಿವಾಲಯ ಮಾಡುತ್ತೇವೆ ಎಂದರು. ಕಾನೂನಾತ್ಮಕವಾಗಿ ಅವರಿಗೆ ಅಗತ್ಯವಿರುವ ಸಹಾಯ ಮಾಡುತ್ತೇವೆ. ಕಲ್ಯಾಣ ಕೆಲಸಗಳನ್ನು ಮಾಡುತ್ತೇವೆ ಎಂದು ಹೇಳಿದರು.
|
4 |
+
ಕೆನಡಾ, ಯುಕೆ, ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳ ಅನಿವಾಸಿ ಭಾರತೀಯರು ಸದನದ ಕಲಾಪ ವೀಕ್ಷಿಸುತ್ತಿದ್ದಾರೆ. ಅವರನ್ನು ಸ್ವಾಗತಿಸುತ್ತೇನೆ ಎಂದರು. ಉದ್ಯೋಗಹರಿಸಿಕೊಂಡು ಬೇರೆ ಬೇರೆ ದೇಶಗಳಲ್ಲಿ ಉದ್ಯೋಗವನ್ನು ಕಟ್ಟಿಕೊಂಡಿದ್ದಾರೆ. ಅನೇಕರು ಉದ್ಯಮಿಗಳಾಗಿ ಯಶಸ್ವಿಯಾಗಿದ್ದಾರೆ. ಶೇ.60ರಿಂದ 80ರಷ್ಟು ಅನಿವಾಸಿ ಭಾರತೀಯರು ಹೊರ ರಾಷ್ಟ್ರದಲ್ಲಿ ಗಳಿಸಿದ ಆದಾಯವನ್ನು ಭಾರತಕ್ಕೆ ಮರಳಿ ತರುವ ಮನಸ್ಸು ಮಾಡಿದ್ದಾರೆ. ಹೊರ ದೇಶಕ್ಕೆ ಹೋದರೆ ಮರಳಿ ಬರುವುದಿಲ್ಲ ಎಂಬ ಪರಿಸ್ಥಿತಿ ಈಗಿಲ್ಲ. ಸಾಕಷ್ಟು ಬದಲಾಗಿದೆ. ಇಲ್ಲಿ ಸಿಎಸ್ಆರ್ ನಿ ಹಣವನ್ನು ಅಭಿವೃದ್ಧಿಗೆ ಕೊಡುತ್ತಿದ್ದಾರೆ.
|
5 |
+
ರಾಜ್ಯ ಸರ್ಕಾರ ಅನಿವಾಸಿ ಭಾರತೀಯರ ಸಮಿತಿಯನ್ನು ರಚಿಸಿದ್ದು, ಉಪಾಧ್ಯಕ್ಷರಾಗಿ ಆರತಿ ಕೃಷ್ಣ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು, ವಿಧಾನಸಭೆಯ ಕಾರ್ಯಕಲಾಪವನ್ನು ನಮ್ಮ ವಿಶೇಷ ಅತಿಥಿಗಳಾಗಿ ರೈತರು, ಪೌರಕಾರ್ಮಿಕರು, ವಿಶೇಷ ಚೇತನರು, ತೃತೀಯ ಲಿಂಗಿಗಳು ವೀಕ್ಷಣೆ ಮಾಡುತ್ತಿದ್ದಾರೆ.
|
6 |
+
ಇಂದು ಸಭಾಧ್ಯಕ್ಷರ ಗ್ಯಾಲರಿಯಲ್ಲಿ 15 ವಿವಿಧ ರಾಷ್ಟ್ರಗಳಲ್ಲಿರುವ ಅನಿವಾಸಿ ಕನ್ನಡಿಗರು ವೀಕ್ಷಣೆ ಮಾಡುತ್ತಿದ್ದಾರೆ. ಅವರನ್ನು ಎಲ್ಲ ಶಾಸಕರು ಸರ್ಕಾರದ ಪರವಾಗಿ ಸ್ವಾಗತಿಸುವುದಾಗಿ ಹೇಳಿದರು. ವ್ಯಾಪಾರ, ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಗೆ ವಿದೇಶಕ್ಕೆ ತೆರಳಿ ಅಲ್ಲಿ ನೆಲೆಸಿರುವ ಕನ್ನಡಿಗರು, ನಮ್ಮ ಸಂಸ್ಕøತಿ, ಆಚಾರ, ವಿಚಾರವನ್ನು ಮರೆಯದೆ ಆಯಾ ರಾಷ್ಟ್ರಗಳಲ್ಲಿ ಗಳಿಸಿದ ಆದಾಯದ ಒಂದು ಪಾಲನ್ನು ನಮ್ಮ ಸಮಾಜದ ಅಭಿವೃದ್ಧಿಗೆ ಕೊಡುಗೆಯಾಗಿ ನೀಡುತ್ತಿದ್ದಾರೆ. ��ುವಕರಿಗೆ ಉದ್ಯೋಗ ನೀಡುವಲ್ಲಿ ಹಾಗೂ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ದಿಯಲ್ಲಿ ಅವರು ಪರೋಕ್ಷವಾಗಿ ಕೊಡುಗೆ ನೀಡುತ್ತಿದ್ದಾರೆ ಎಂದರು.
|
7 |
+
“ನಾನೂ ಶೂದ್ರ-ನೀವೂ ಶೂದ್ರರು ಯಾಕ್ರೀ ಇದೆಲ್ಲಾ..”
|
8 |
+
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅನಿವಾಸಿ ಭಾರತೀಯ ಕನ್ನಡಿಗರು ಅವೇಶನ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯವರು ಅತಿ ಹೆಚ್ಚು ವಿದೇಶದಲ್ಲಿ ನೆಲೆಸಿದ್ದು, ಅಲ್ಲಿ ತಮ್ಮದೇ ಆದ ಸಂಘಗಳನ್ನು ಕಟ್ಟಿಕೊಂಡಿದ್ದಾರೆ. ಆದರೂ ತಮ್ಮ ಊರಿನ ಸಂಪ್ರದಾಯ, ಸಂಬಂಧವನ್ನು ಮರೆತಿಲ್ಲ. ಎಲ್ಲ ಜಾತಿ ಧರ್ಮೀಯರು ಹೋಗಿದ್ದಾರೆ. ಅವರೊಂದಿಗೆ ಸಂಬಂಧವನ್ನು ಇನ್ನಷ್ಟು ಗಟ್ಟಿ ಮಾಡಬೇಕು. ನಮ್ಮಲ್ಲಿನ ಹೂಡಿಕೆಯಲ್ಲೂ ಸಹಕಾರಿಯಾಗಲಿದೆ. ರಾಜಕೀಯ, ಸಾಮಾಜಿಕ, ಕೈಗಾರಿಕಾ ವಲಯದಲ್ಲೂ ದೊಡ್ಡ ಮಟ್ಟದಲ್ಲಿ ಹೊರದೇಶದಲ್ಲಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
|
9 |
+
ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಬಹಳ ಹಿಂದಿನಿಂದಲೂ ವಿದೇಶಗಳಿಗೆ ಹೋಗುವ ಪರಿಪಾಠವಿದೆ. ಜಗತ್ತಿನ ಎಲ್ಲೆಡೆ ಭಾರತೀಯ ಸಂಸ್ಕøತಿಯ ಕುರುಹುಗಳಿವೆ. ಅನಿವಾಸಿ ಭಾರತೀಯರು ತವರಿಗೆ ಹೆಮ್ಮೆ ತರುವ ಕೆಲಸವನ್ನು ಮಾಡಿದ್ದಾರೆ. ಅವರೊಂದಿಗೆ ಹೆಚ್ಚು ಸಂಪರ್ಕ ಹೊಂದುವುದರಿಂದ ರಾಜ್ಯದ ಅಭಿವೃದ್ದಿಗೂ ಅನುಕೂಲವಾಗಲಿದೆ. ಪ್ರಧಾನಿ ನರೇಂದ್ರಮೋದಿ ಅವರು ದೇಶ ಮುನ್ನಡೆಸುವ ರೀತಿ ಭಾರತೀಯರು ವಿದೇಶಗಳಲ್ಲೂ ಹೆಮ್ಮೆ ಪಡುವಂತಾಗಿದೆ ಎಂದು ಹೇಳಿದರು.
|
10 |
+
ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ, ಶಾಸಕರಾದ ಎನ್.ಎ.ಹ್ಯಾರೀಸ್, ಡಾ.ರಂಗನಾಥ್ ಅವರುಗಳು, ಅನಿವಾಸಿ ಭಾರತೀಯರ ಸೇವೆಯನ್ನು ಗುಣಗಾನ ಮಾಡಿ ಸದನ ವೀಕ್ಷಿಸುತ್ತಿರುವುದನ್ನು ಪಕ್ಷಬೇಧ ಮರೆತು ಶ್ಲಾಘಿಸಿದರು.
|
eesanje/url_46_229_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಶಾಸಕರ ಗುರುತಿಗೆ ಚಿನ್ನಮಿಶ್ರಿತ ಗಂಡಭೇರುಂಡ ಲಾಂಛನ
|
2 |
+
ಬೆಂಗಳೂರು,ಫೆ.21- ಶಾಸಕರನ್ನು ಗುರುತಿಸಲು ಅನುಕೂಲವಾಗುವಂತೆ ವಿಧಾನಸಭೆ ಸಚಿವಾಲಯ ಚಿನ್ನ ಮಿಶ್ರಿತ ಗಂಡಭೇರುಂಡ ಲಾಂಛನವನ್ನು ವಿಧಾನಸಭೆ ಸದಸ್ಯರಿಗೆ ವಿತರಿಸಿದೆ. ಕಳೆದ 9 ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ ಹಲವಾರು ಮಂದಿ ಹೊಸ ಶಾಸಕರು ಆಯ್ಕೆಯಾಗಿದ್ದಾರೆ. ಹೊಸ ಮುಖಗಳನ್ನು ಗುರುತಿಸಲು ಕಷ್ಟವಾಗುತ್ತಿದೆ. ಈ ಹಿಂದೆ ಹಿರಿಯ ಅಪರಿಚಿತ ನಾಗರಿಕರೊಬ್ಬರು ವಿಧಾನಸಭೆ ಕಲಾಪ ನಡೆಯುತ್ತಿದ್ದಾಗ ಸಭಾಂಗಣದ ಒಳಗೆ ಬಂದು ಕುಳಿತುಕೊಂಡಿದ್ದರು. ಭದ್ರತಾ ಸಿಬ್ಬಂದಿಗಳಿಗೆ ಮತ್ತು ಅಧಿಕಾರಿಗಳಿಗೆ ಶಾಸಕರನ್ನು ಗುರುತಿಸುವಾಗ ಗೊಂದಲಗಳಾಗುತ್ತಿದ್ದವು. ಇದಕ್ಕೆ ಶಾಶ್ವತ ಪರಿಹಾರವೆಂಬಂತೆ ಗಂಡಭೇರುಂಡ ಲಾಂಛನದ ಫಲಕವನ್ನು ಜಾರಿಗೆ ತರಲಾಗಿದೆ.
|
3 |
+
ಭಾಗಶಃ ಪ್ರಮಾಣದ ಚಿನ್ನಮಿಶ್ರಿತ ಲೋಹದ ಗಂಡಭೇರುಂಡ ಲಾಂಛನದ ಮಧ್ಯೆ ಎಂಎಲ್ಎ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ. ಹೈಡ್ರೀಮ್ಸ್ ಸಂಸ್ಥೆ ಈ ಲಾಂಛನವನ್ನು ವಿಧಾನಸಭೆಗೆ ಪೂರೈಸಿದೆ. ಲಾಂಛನ ಬಳಕೆ ಮಾಡುವ ಬಗ್ಗೆ ಶಾಸಕರಿಗೆ ಸೂಚನೆ ಕೂಡ ನೀಡಲಾಗಿದೆ. ಶಾಸಕರಿಗೆ ಮಾತ್ರ ಈ ರೀತಿಯ ಲಾಂಛನವನ್ನು ನೀಡಲಾಗಿದ್ದು, ಅದನ್ನು ಧರಿಸಿದವರನ್ನು ಗುರುತಿಸಲು ಸುಲಭವಾಗುತ್ತದೆ ಎಂದು ಹೇಳಲಾಗಿದೆ.
|
4 |
+
ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ
|
5 |
+
ವಿಧಾನಸಭೆಯಲ್ಲಿ ಇಂದು ಶಾಸಕರಿಗೆ ಲಾಂಛನವನ್ನು ವಿತರಿಸಲಾರಂಭಿಸಲಾಯಿತು. ಕಲಾಪದ ಆರಂಭದಲ್ಲೇ ವಿಧಾನಸಭಾಧ್ಯಕ್ಷರು ಎಲ್ಲರೂ ಲಾಂಛನವನ್ನು ಧರಿಸಿಯೇ ಕಲಾಪಕ್ಕೆ ಬರಬೇಕು. ಕ್ಷೇತ್ರದಲ್ಲಿ ಪ್ರವಾಸ ಮಾಡುವಾಗ ದೆಹಲಿಗೆ ತೆರಳಿದಾಗ ದೇಶ, ವಿದೇಶಗಳ ಪ್ರಯಾಣದ ವೇಳೆ ಈ ಲಾಂಛನ ಬಳಕೆ ಮಾಡುವುದರಿಂದ ಶಾಸಕರನ್ನು ಗುರುತಿಸಲು ಸುಲಭವಾಗುತ್ತದೆ ಎಂದರು. ಹೀಗಾಗಿ ನಾಳೆಯಿಂದ ಎಲ್ಲಾ ಶಾಸಕರು ಸದನಕ್ಕೆ ಲಾಂಛನ ಬಳಸಿ ಬರುವುದು ಸೂಕ್ತ ಎಂದು ಸಭಾಧ್ಯಕ್ಷರು ಹೇಳಿದರು.
|
eesanje/url_46_229_9.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಒಕ್ಕೂಟ ವ್ಯವಸ್ಥೆಗೆ ಮೋದಿ ಅಪಾಯಕಾರಿ : ಸಿದ್ದು
|
2 |
+
ಬೆಂಗಳೂರು,ಫೆ.21-ನರೇಂದ್ರಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನಪರಿಷತ್ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.
|
3 |
+
ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು. ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ50 ರಷ್ಟು ವಾಪಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು.
|
4 |
+
ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ, ಕರ್ನಾಟಕ ರಾಜ್ಯಕ್ಕೆ ವಾಪಸ್ ಕೊಡುತ್ತಿರುವುದು ಶೇ.12-13ರಷ್ಟು ಮಾತ್ರ. ಮೋದಿ ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು ಎಂದರು.
|
5 |
+
ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ 24,44,213 ಕೋಟಿ ಇತ್ತು.
|
6 |
+
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಎಡವಟ್ಟು
|
7 |
+
ಅಂದು ರಾಜ್ಯಕ್ಕೆ 51,000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ 30,42,243 ಕೋಟಿ ಇದ್ದರೆ ನಮಗೆ ಬಂದಿದ್ದು 31,734ಕೋಟಿ ರೂ., 2021-22 ರಲ್ಲಿ 34,83,236 ಕೋಟಿ ಗಾತ್ರದ ಬಜೆಟ್ ಗೆ , ರಾಜ್ಯಕ್ಕೆ 48,589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ 41,81,232 ಕೋಟಿ , ರಾಜ್ಯಕ್ಕೆ 53510 ಕೋಟಿ ಮಾತ್ರ ಬಂತು. 2023-24ರಲ್ಲಿ 45,03,007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು 50,257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ 59,785 ಕೋಟಿ ಬರುತ್ತದೆ ಎಂದು ರಾಜ್ಯಕ್ಕೆ ಆಗುತ್ಯಲೇ ಇರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.
|
8 |
+
ಈ ರೀತಿ ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುತ್ತ�� ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ದೇಶದ ಏಕತೆಗೆ ಅಪಾಯವೊಡ್ಡುತ್ತದೆ ಎಂದಿದ್ದರು. ಅದೇ ಪ್ರಧಾನಿಯವರು ಗುಜರಾತಿನ ಸಿಎಂ ಆಗಿದ್ದಾಗ 2012ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿಧಿರೋಸಿದ್ದರು.
|
9 |
+
ಐಜೂರು ಪಿಎಸ್ಐ ಅಮಾನತು, ತನಿಖೆಗೆ ಆದೇಶ : ಗೃಹ ಸಚಿವ ಪರಮೇಶ್ವರ
|
10 |
+
ಗುಜರಾತ್ ರಾಜ್ಯ ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೇ ಎಂದಿದ್ದರು. ಅಂದಿನ ಕೇಂದ್ರಕ್ಕೆ ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ ಎಂದು ಮೋದಿ ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
|
eesanje/url_46_22_1.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯೊಳಗಿನ ಅಸಮಾಧಾನ ಸರಿದೂಗಿಸಲು ಆರ್ಎಸ್ಎಸ್ ಮಧ್ಯಪ್ರವೇಶ, ನಾಳೆ ಮಹತ್ವದ ಸಭೆ
|
2 |
+
|
3 |
+
ಬೆಂಗಳೂರು, ಸೆ.11-ಮನೆಯೊಂದು ಮೂರು ಬಾಗಿಲು ಎಂಬಂತಾಗಿರುವ ಬಿಜೆಪಿಯಲ್ಲಿ ಉಂಟಾಗಿರುವ ಅಸಮಾಧಾನವನ್ನು ಸರಿದೂಗಿಸಲು ಆರ್ಎಸ್ಎಸ್ ಮಧ್ಯಪ್ರವೇಶ ಮಾಡಿದ್ದು, ನಾಳೆ ಮಹತ್ವದ ಸಭೆ ನಡೆಸಲಿದೆ.ಸಭೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯ ಬಿಜೆಪಿ ಉಸ್ತುವಾರಿ ರಾಧಮೋಹನ್ದಾಸ್ ಅಗರವಾಲ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 40 ಪ್ರಮುಖ ನಾಯಕರನ್ನು ಆಹ್ವಾನಿಸಲಾಗಿದೆ.
|
4 |
+
ಮಾಗಡಿ ರಸ್ತೆ ಚೆನ್ನೇನಹಳ್ಳಿಯಲ್ಲಿರುವ ಆರ್ಎಸ್ಎಸ್ನ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ, ಪಕ್ಷ ಸಂಘಟನೆ, ಸರ್ಕಾರದ ವಿರುದ್ಧ ಹೋರಾಟ, ಸದಸ್ಯತ್ವ ನೋಂದಣಿ, ಹಲವು ಮಹತ್ವದ ವಿಷಯಗಳು ಚರ್ಚೆಗೆ ಒಳಪಡಲಿವೆ.ಸಾಮಾನ್ಯವಾಗಿ ಬಿಜೆಪಿಯ ಆಂತರಿಕ ವಿಷಯದಲ್ಲಿ ಮೂಗು ತೂರಿಸಲು ಹಿಂದೇಟು ಹಾಕುವ ಆರ್ಎಸ್ಎಸ್ ನಾಯಕರು ಕೇಂದ್ರ ಸಚಿವರ ಮನವಿ ಮೇರೆಗೆ ಬೈಟಕ್ ನಡೆಸಲು ಮುಂದಾಗಿದ್ದಾರೆಂದು ಮೂಲಗಳು ತಿಳಿಸಿವೆ.
|
5 |
+
ಬಿಜೆಪಿ ನಾಯಕರು ಬಯಸಿದರೆ ಮಾತ್ರ ಎಲ್ಲರನ್ನೂ ಒಟ್ಟುಗೂಡಿಸಿ ಅಸಮಾಧಾನಕ್ಕೆ ಆಸ್ಪದವಿಲ್ಲದಂತೆ ಪಕ್ಷ ಮುನ್ನಡೆಸಿಕೊಂಡು ಹೋಗಬೇಕೆಂದು ಆರ್ಎಸ್ಎಸ್ ನಾಯಕರು ಸೂಕ್ತ ಸಲಹೆ, ಮಾರ್ಗದರ್ಶನ ಮಾಡುತ್ತಾರೆ. ಅದನ್ನು ಹೊರತುಪಡಿಸಿದರೆ ಬಿಜೆಪಿಯ ಕೆಲವು ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದು ಇಲ್ಲವೇ ಮಧ್ಯಪ್ರವೇಶ ಮಾಡುವ ಅಭ್ಯಾಸವನ್ನು ಸಂಘ ಪರಿವಾರದ ನಾಯಕರು ಇಟ್ಟುಕೊಂಡಿಲ್ಲ.
|
6 |
+
ಪ್ರಧಾನಿ ನರೇಂದ್ರಮೋದಿ ಅವರ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿರುವ ರಾಜ್ಯವನ್ನು ಪ್ರತಿನಿಧಿಸುವ ಸಂಸದರೊಬ್ಬರು ನೀವು ಹೇಳಿದರೆ ಎಲ್ಲವೂ ಸರಿಹೋಗುತ್ತದೆ. ಪಕ್ಷವು ಕಷ್ಟ ಕಾಲದಲ್ಲಿರುವಾಗ ನೀವು ಮಧ್ಯಪ್ರವೇಶ ಮಾಡಲೇಬೇಕೆಂದು ಕೆಲ ದಿನಗಳ ಹಿಂದೆ ಕೋರಿಕೊಂಡಿದ್ದರು. ಅವರ ಮನವಿ ಮೇರೆಗೆ ಸಭೆ ನಡೆಯಲಿದೆ.
|
7 |
+
ರಾಜ್ಯ ಬಿಜೆಪಿಯಲ್ಲಿ ಒಡಕು:ವಿಧಾನಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕರ ನಡುವೆ ಬಿರುಕು ಮೂಡಿತು. ನಂತರ, ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಬಳಿಕ ಕೆಲ ಹಿರಿಯ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಮುಲಾಮು ಹಚ್ಚಲಾಯ್ತು. ಆದರೂ, ಪೂರ್ಣ ಪ್ರಮಾಣದಲ್ಲಿ ಗಾಯ ವಾಸಿಯಾಗಲಿಲ್ಲ.
|
8 |
+
ನಂತರ, ಲೋಕಸಭೆ ಚುನಾವಣೆಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ನಿರೀಕ್ಷೆಯಲ್ಲಿದ್ದ ಮಾಜಿ ಸಂಸದ ಪ್ರತಾಪ್ಸಿಂಹ ಸೇರಿದಂತೆ ಕೆಲ ನಾಯಕರು ಹತಾಶೆಯಿಂದ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದರು. ಆಗಲೂ ಕೂಡ ತೇಪೆ ಹಚ್ಚಲಾಯಿತಾದರೂ ಬಿರುಕು ಮತ್ತೆ ಮೂಡಿತ್ತು.
|
9 |
+
ಇತ್ತೀಚಿಗೆ ಬಿಜೆಪಿ ನಡೆಸಿದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಕಾಣಿಸಿಕೊಳ್ಳಲಿಲ್ಲ. ಬದಲಿಗೆ ನಾವು ಬಳ್ಳಾರಿವರೆಗೆ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇವೆ. ಹೈಕಮಾಂಡ್ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ ಎಂದು ಘೋಷಿಸಿದ್ದರು. ಬಳಿಕ, ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ಪ್ರತಾಪ್ ಸಿಂಹ, ಕುಮಾರ್ಬಂಗಾರಪ್ಪ ಸೇರಿದಂತೆ ಇನ್ನಿತರೆ ಕೆಲ ನಾಯಕರು ನಡೆಸಿದ ಸಭೆ ಚರ್ಚೆಗೆ ಕಾರಣವಾಯಿತು.
|
10 |
+
ಇತ್ತೀಚಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಭಾ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದರು.ಇದರ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ದೆಹಲಿಗೆ ತೆರಳಿದ್ದು, ವರಿಷ್ಠರ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಏನು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುವುದನ್ನು ಕಾದು ನೋಡಬೇಕು.
|
eesanje/url_46_22_10.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
|
2 |
+
|
3 |
+
ಬೆಂಗಳೂರು,ಸೆ.10– ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.ಮುಡಾದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಅಧೀಕ್ಷಕ(ಚೀಫ್ ಸೂಪರಿಡೆೆಂಟ್), ಮುಖ್ಯ ಅಭಿಯಂತರ(ಚೀಫ್ ಇಂಜಿನಿಯರ್), ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಒಟ್ಟು 18 ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗಬೇಕೆಂದು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
|
4 |
+
ಗುರುವಾರದೊಳಗೆ ಈ ಎಲ್ಲಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಮುಡಾದಲ್ಲಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಆರೋಪ ಪ್ರಕರಣ ಕುರಿತಂತೆ ಕೇಳಿಬಂದಿರುವ ಆರೋಪಗಳಿಗೆ ದಾಖಲೆಗಳನ್ನು ಹಾಜರುಪಡಿಸುವಂತೆಯೂ ಸೂಚನೆ ನೀಡಲಾಗಿದೆ.
|
5 |
+
ಮೈಸೂರು ತಾಲೂಕಿನ ಹಿನಕಲ್ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಹಿನಕಲ್ ಸರ್ವೇ ನಂಬರ್ 89ರಲ್ಲಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಮುಡಾದ 7.18 ಗುಂಟೆ ಜಮೀನಿನಲ್ಲಿ ನಿವೇಶನ ಮಾಡಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಹಂಚಿರುವ ಆರೋಪವಿದೆ.
|
6 |
+
ಆರೋಪಕ್ಕೆ ಸಂಬಂಧಿಸಿ ಆರ್ಟಿಐ ಕಾರ್ಯಕರ್ತ ಗಂಗರಾಜು 2017ರಲ್ಲಿ ದೂರು ನೀಡಿದ್ದರು. ಈ ಸಂಬಂಧ 2022ರಲ್ಲಿ ಮೈಸೂರು ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡಿತ್ತು. ಸರ್ಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
|
7 |
+
ಮೈಸೂರು ತಾಲ್ಲೂಕು ಹಿನಕಲ್ ಗ್ರಾಮ ಸರ್ವೆ ನಂ.89ರಲ್ಲಿ 7 ಎಕರೆ 18 ಗುಂಟೆ ಜಮೀನನ್ನು ಹಿನಕಲ್ ಮಂಡಲ ಪಂಚಾಯ್ತಿಯವರು ಆಶ್ರಯ ಯೋಜನೆಯಡಿ ಅನಧಿಕೃತ ಬಡಾವಣೆ ನಿರ್ಮಿಸಿ/ಉಳ್ಳವರಿಗೆ ರಾಜಕೀಯ ವ್ಯಕ್ತಿಗಳಿಗೆ ಹಂಚಿಕೆ ಮಾಡಿ ವಂಚಿಸಿದ ಬಗ್ಗೆ 2017ರ ಏಪ್ರಿಲ 1ರಂದು ನಾನು ತಮ ಕಛೇರಿಗೆ ದೂರು ನೀಡಿದ್ದೆ. ಇದು ದೃಢಪಟ್ಟಿರುವುದರಿಂದ ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕಾಗಿ ಮನವಿ ಸಲ್ಲಿಸುತ್ತಿದ್ದೇನೆ ಎಂದು 2017ರಲ್ಲಿ ಗಂಗರಾಜು ಭ್ರಷ್ಟಾಚಾರ ನಿಗ್ರಹ ದಳದ ಮೈಸೂರು ಜಿಲ್ಲಾ ವ್ಯಾಪ್ತಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಪತ್ರ ಬರೆದಿದ್ದರು.
|
8 |
+
ಸರ್ವೆ ನಂ.89ರಲ್ಲಿ 7 ಎಕರೆ 18 ಗುಂಟೆ ಮುಡಾ ಪ್ರಾಧಿಕಾರದ ಸ್ವತ್ತಿನಲ್ಲಿ ಅಕ್ರಮವಾಗಿ ಮುಡಾ ಅನುಮತಿಯನ್ನು ಪಡೆಯದೇ ಬಡಾವಣೆಯನ್ನು ನಿರ್ಮಿಸಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಹಂಚಿಕೆ ಮಾಡುತ್ತೇವೆಂದು ಸದರಿ ಹಿನಕಲ್ ಮಂಡಲ ಪಂಚಾಯ್ತಿಯ ಅಧ್ಯಕ್ಷರು, ಕಾರ್ಯದರ್ಶಿಗಳು (ಪ್ರಧಾನರು) 1990-92ನೇ ಅವಧಿಯಲ್ಲಿ ಇದ್ದಂತಹ ಪಂಚಾಯ್ತಿಯ ಸರ್ವಸದಸ್ಯರು ಹಾಗೂ ಈ ಮೇಲ್ಕಂಡ ವಿಷಯಕ್ಕೆ ಸಂಬಂಧಪಟ್ಟಂತೆ ನಿರ್ಧಾರ ತೆಗೆದುಕೊಳ್ಳುವ ಸಮಯದಲ್ಲಿ ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲಾ ಅಧಿಕಾರಿವರ್ಗದವರ ವಿರುದ್ದ ಕ್ರಮ ತೆಗೆದುಕೊಳ್ಳಲು ತಮ ಕಛೇರಿಗೆ ಮನವಿ ಸಲ್ಲಿಸಿದ್ದೆ. ಇದು ದೃಢವಾಗಿರುವುದರಿಂದ ಮುಡಾ ಪ್ರಾಧಿಕಾರವು ಈ ಮೇಲ್ಕಂಡ ಸ್ವತ್ತನ್ನು ಭೂ ಮಾಲೀಕರಿಂದ ಭೂಸ್ವಾಧೀನ ಮಾಡಿಕೊಳ್ಳುವ ಮುಂಚೆ ಯಾವ ಉದ್ದೇಶಕ್ಕೋಸ್ಕರ ಭೂಸ್ವಾಧೀನಕ್ಕೆ ಸರ್ಕಾರಕ್ಕೆ ನಿವೇದಿಸಿಕೊಂಡಿದ್ದರೊ ಆ ಉದ್ದೇಶವನ್ನು ಜನರಿಗೆ ಈಡೇರಿಸದೆ ವಂಚಿಸಿದೆ.
|
9 |
+
ಹೀಗೆ ವಂಚಿಸಿರುವ ಅಂದಿನ ಹಾಗೂ ಈ ವಿಷಯಕ್ಕೆ ಸಂಬಂಧಪಟ್ಟಂತೆ ಹಲವು ಬಾರಿ ಮುಡಾ ಪ್ರಾಧಿಕಾರಕ್ಕೂ ವಿನಂತಿಸಿಕೊಂಡಿದ್ದರೂ ಯಾವುದೇ ಕ್ರಮವಹಿಸದೆ ಕರ್ತವ್ಯ ಲೋಪ ಎಸಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದರು.
|
10 |
+
ಇದೇ ರೀತಿ ಮೈಸೂರು ನಗರದಲ್ಲಿ ಮೈಸೂರು ಜನರಿಗೋಸ್ಕರ ಬಡಾವಣೆ ನಿರ್ಮಿಸಿ ಹಾಗೂ ಉದ್ಯಾನವನ ಮತ್ತು ಇನ್ನಿತರ ಸಾರ್ವಜನಿಕರಿಗೋಸ್ಕರ ಸೌಲಭ್ಯ ನೀಡಲು ನೂರಾರು ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಂಡಿದ್ದು, ಆದರೆ ಯಾವ ಉದ್ದೇಶಕ್ಕೆ ಭೂಸ್ವಾಧೀನ ಮಾಡಿಕೊಂಡಿದ್ದಾರೋ ಮಾಡದೆ ವಂಚಿಸಿರುವುದು ಸಾಬೀತಾಗಿರುತ್ತದೆ. ಆದ್ದರಿಂದ ಈ ಮುಡಾ ಕರ್ಮಕಾಂಡಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಿ ಸರ್ವೆ ನಂಬರ್ 89ರಲ್ಲಿ ಒಟ್ಟು 11 ಎಕರೆ 18 ಗುಂಟೆಯನ್ನೂ ಸಹ ಅಕ್ರಮವಾಗಿ ಹಿನಕಲ್ ಮಂಡಲ ಪಂಚಾಯಿತಿಯ ಅಂದಿನ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ವಂಚಿಸಿರುತ್ತಾರೆ.
|
11 |
+
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಪಟ್ಟಂತೆ ಸ್ವಾಧೀನಪಡಿಸಿ ಕೊಂಡಿದ್ದಂತಹ ಸ್ವತ್ತಿನಲ್ಲಿ ಹಲವಾರು ಲ್ಯಾಂಡ್ ಮಾಫಿಯ ಹಾಗೂ ರಾಜಕೀಯ ಮುಖಂಡರು ಇಂತಹ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿಸಿಕೊಂಡು ಕಟ್ಟಡಗಳನ್ನು ನಿರ್ಮಿಸಿ ಹಾಗೂ ನಿವೇಶನಗಳನ್ನಾಗಿ ಮಾಡಿ ಹಂಚಿಕೆ ಮಾಡುತ್ತಿದ್ದರೂ ಸಹ ಸಂಬಂಧಪಟ್ಟ ಮುಡಾ ಅಧಿಕಾರಿಗಳು ಯಾವುದೇ ಕ್ರಮವಹಿಸುತ್ತಿಲ್ಲ ಹಾಗೂ ಈ ಅಕ್ರಮಕ್ಕೆ ಸದರಿ ಮುಡಾ ಅಧಿಕಾರಿಗಳೂ ಸಹ ಶಾಮಿಲಾಗಿರುತ್ತಾರೆ. ಇದಕ್ಕೆ ನಿದರ್ಶನವೆಂಬಂತೆ ಈ ಮೇಲ್ಕಂಡ ಹೆಸರಿಸಿರುವ ಇರುವ ಸರ್ವೆ ನಂಬರ್ನಲ್ಲಿ 7 ಎಕರೆ 18 ಗುಂಟೆ ಸ್ವತ್ತೇ ಸಾಕ್ಷಿ ಎಂದು ಗಂಗರಾಜು ಪತ್ರದಲ್ಲಿ ಆರೋಪಿಸಿದ್ದರು.ಸಿಎಂ ವಿರುದ್ಧ ಪ್ರಾಸಿಕ್ಯೂಸನ್ಗೆ ಅನುಮತಿ
|
12 |
+
ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಮತ್ತು ಪ್ರದೀಪ್ ಮತ್ತು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಮುಡಾ ನಿವೇಶನಗಳ ಅಕ್ರಮ ಮಂಜೂರಾತಿ ಪ್ರಕರಣ ಮೈಸೂರಿನಲ್ಲಿ ನಡೆದಿರುವ ಕಾರಣ, ಇದರ ವಿಚಾರಣೆಯ ದೂರು ಸಹ ಮೈಸೂರಿನಲ್ಲೇ ದಾಖಲಾಗಬೇಕು.
|
13 |
+
ಟಿ.ಜೆ.ಅಬ್ರಹಾಂ ಅವರ ಹಿಂದಿನ ಮನವಿಯ ನಂತರ ಜುಲೈ 26ರಂದು ಶೋಕಾಸ್ ನೋಟಿಸ್ ಜಾರಿಗೊಳಿಸಲು ರಾಜ್ಯಪಾಲರನ್ನು ಪ್ರೇರೇಪಿಸಿತ್ತು. ನೋಟಿಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಏಕೆ ಪ್ರಾಸಿಕ್ಯೂಷನ್ ಮಂಜೂರು ಮಾಡಬಾರದು ಎಂಬುದನ್ನು ವಿವರಿಸಿ ಆರೋಪಗಳಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು.
|
eesanje/url_46_22_11.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ವಿಜಯೇಂದ್ರ ದೆಹಲಿ ಭೇಟಿ
|
2 |
+
'
|
3 |
+
ಬೆಂಗಳೂರು,ಸೆ.10-ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿ ಹಬ್ಬಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ನವದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಕೆರಳಿಸಿದೆ.ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಬಿ.ವೈ.ವಿಜಯೇಂದ್ರ ದೆಹಲಿಗೆ ವರಿಷ್ಠರ ಸೂಚನೆಯಂತೆ ಮಾತುಕತೆ ನಡೆಸಲು ಪ್ರಯಾಣ ಬೆಳೆಸಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
|
4 |
+
ಮೇಲ್ನೋಟಕ್ಕೆ ದೆಹಲಿ ಪ್ರಯಾಣದಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಪಕ್ಷದ ಮೂಲಗಳು ಹೇಳಿವೆಯಾದರೂ ಪ್ರಸಕ್ತ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗೂ ವಿಜಯೇಂದ್ರ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದಕ್ಕೂ ಸಂಬಂಧವಿದೆ ಎಂದು ಹೇಳಲಾಗುತ್ತಿದೆ.ಒಂದು ಕಡೆ ಸಚಿವ ಎಂ.ಬಿ.ಪಾಟೀಲ್ ದೆಹಲಿಯಲ್ಲಿ ಬೀಡು ಬಿಟ್ಟಿರುವುದು, ಕಳೆದ ವಾರ ಸಚಿವರಾದ ಪರಮೇಶ್ವರ್, ಸತೀಶ್ ಜಾರಕಿಹೊಳಿ, ದೆಹಲಿಯಲ್ಲೇ ಎರಡು ದಿನ ವಾಸ್ತವ್ಯ ಹೂಡಿ ಎಐಸಿಸಿ ನಾಯಕರ ಜೊತೆ ಮಾತುಕತೆ ನಡೆಸಿದ್ದರು.
|
5 |
+
ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯದಲ್ಲಿ ಸದಸ್ಯತ್ವ ನೋಂದಣಿ ನಡೆಸುತ್ತಿದ್ದ ವಿಜಯೇಂದ್ರ ದಿಢೀರನೇ ಛಲವಾದಿ ನಾರಾಯಣಸ್ವಾಮಿ ಜೊತೆ ದೆಹಲಿಗೆ ತೆರಳಿರುವುದು ಬಿಜೆಪಿಯಲ್ಲಿ ಹಠಾತ್ ಬೆಳವಣಿಗೆ ಎಂದೇ ಹೇಳಲಾಗುತ್ತಿದೆ.
|
6 |
+
ಕಿತ್ತೂರು ಕರ್ನಾಟಕ ಭಾಗದ ಪ್ರಭಾವಿ ಸಚಿವರೊಬ್ಬರು ಕೆಲದಿನಗಳ ಹಿಂದೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೊತೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ.ಬೆಳಗಾವಿಯ ಮಾಜಿ ಸಚಿವರೊಬ್ಬರು ಮಹಾರಾಷ್ಟ್ರದ ಬಿಜೆಪಿ ಹಿರಿಯ ನಾಯಕರ ಜೊತೆ ಸತತ ಸಂಪರ್ಕದಲ್ಲಿದ್ದು ಅವರ ಸೂಚನೆ ಮೇರೆಗೆ ಪ್ರಮೋದ್ ಸಾವಂತ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದ ಎಂದು ತಿಳಿದುಬಂದಿದೆ.
|
7 |
+
ಕರ್ನಾಟಕ ರಾಜಕಾರಣದ ಬೆಳವಣಿಗೆಗಳ ಬಗ್ಗೆ ದೆಹಲಿ ಬಿಜೆಪಿ ನಾಯಕರು ನಿರಂತರವಾಗಿ ಕಣ್ಣಿಟ್ಟಿದ್ದಾರೆ. ಪ್ರತಿಯೊಂದು ಬೆಳವಣಿಗೆಗಳ ಬಗ್ಗೆ ಪ್ರತಿದಿನ ರಾಜ್ಯ ನಾಯಕರ ಜೊತೆ ಮಾಹಿತಿಯನ್ನು ಪಡೆಯುತ್ತಿದ್ದಾರೆ.ಗುರುವಾರ ಹೈಕೋರ್ಟ್ನಲ್ಲಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಸನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಅರ್ಜಿಯ ವಿಚಾರಣೆ ಅಂತಿಮ ಹಂತಕ್ಕೆ ತಲುಪಿದೆ.
|
8 |
+
ಸಿಎಂ ಪರ ವಾದ ಮಂಡಿಸಿರುತ್ತಿರುವ ಅಭಿಷೇಕ್ ಮನುಸಿಂಘ್ವಿ ಅವರ ವಾದ ಮುಗಿದ ಬಳಿಕ ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅಂದೇ ತೀರ್ಪನ್ನು ನೀಡಬಹುದು ಇಲ್ಲವೇ ಕಾಯ್ದಿರಿಸಬಹುದು. ಹೈಕೋರ್ಟ್ ನೀಡುವ ತೀರ್ಪು ಸಿದ್ದ��ಾಮಯ್ಯನವರ ರಾಜಕೀಯ ಭವಿಷ್ಯವನ್ನು ತೀರ್ಮಾನಿಸಲಿದೆ ಎಂದು ಹೇಳಲಾಗುತ್ತಿದೆ.
|
9 |
+
ಒಂದು ವೇಳೆ ಹೈಕೋರ್ಟ್ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಎತ್ತಿ ಹಿಡಿದರೆ ಸಿದ್ದರಾಮಯ್ಯನವರಿಗೆ ನೈತಿಕತೆ ಪ್ರಶ್ನೆ ಎದುರಾಗುತ್ತದೆ. ಆ ವೇಳೆ ರಾಜ್ಯ ರಾಜಕಾರಣದಲ್ಲಿ ಕೆಲವು ದಿಢೀರ್ ಬೆಳವಣಿಗೆಗಳು ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
|
10 |
+
ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿಯೇ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ವಿಜಯೇಂದ್ರ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ದೆಹಲಿಗೆ ತೆರಳಿರಬಹುದೆಂದು ಬಿಜೆಪಿಯಲ್ಲಿ ಗುಸುಗುಸು ಹಬ್ಬಿದೆ. ಆದರೆ ಬಿಜೆಪಿ ನಾಯಕರು ಮಾತ್ರ ಇಂಥ ಸಾಧ್ಯಸಾಧ್ಯತೆಗಳನ್ನು ತಳ್ಳಿ ಹಾಕುತ್ತಿದ್ದು ಅಂತಹ ಯಾವುದೇ ಬೆಳವಣಿಗೆಗಳು ನಡೆಯುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯಿಸುತ್ತಿದ್ದಾರೆ.
|
eesanje/url_46_22_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
|
2 |
+
:
|
3 |
+
ಬೆಂಗಳೂರು,ಸೆ.9-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ.
|
4 |
+
ನಟ ದರ್ಶನ್, ಪವಿತ್ರಗೌಡ ಸೇರಿದಂತೆ 17 ಆರೋಪಿಗಳನ್ನು ಪ್ರತ್ಯೇಕ ಜೈಲಿನಿಂದ ವಿಡಿಯೋ ಕಾನ್ಫರೆನ್್ಸ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು 3 ದಿನಗಳ ಕಾಲ (ಸೆ.12) ವಿಸ್ತರಿಸಿದೆ.
|
5 |
+
ಇಂದಿನ ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಹಾರ್ಡ್ಡಿಸ್ಕ್, ಪೆನ್ಡ್ರೈವ್ ಸೇರಿದಂತೆ 60ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಲ್ಲಿಸಿದರು. 2 ವಾರದಲ್ಲಿ ಡಿಜಿಟಲ್ ಸಾಕ್ಷ್ಯಗಳನ್ನು ಸಲ್ಲಿಸುವುದಾಗಿ ಕೋರ್ಟ್ಗೆ ಮಾಹಿತಿ ನೀಡಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಗಳಿಗೆ ಮೂರು ದಿನಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿತು.
|
6 |
+
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ದರ್ಶನ್ ಸೇರಿದಂತೆ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದರು. ಇಂದಿಗೆ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
|
7 |
+
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಈಗಾಗಲೇ 3 ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್, 12 ದಿನಗಳ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರನ್ನು ಬಳ್ಳಾರಿಜೈಲಿಗೆ ವರ್ಗಾವಣೆ ಮಾಡ
|
eesanje/url_46_22_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿಎಂಗೆ ತಲೆನೋವಾಗಿ ಪರಿಣಮಿಸಿದ ಮಾಹಿತಿ ಹಕ್ಕು ಆಯುಕ್ತರ ನೇಮಕಾತಿ
|
2 |
+
ಬೆಂಗಳೂರು,ಸೆ.10-ಸರ್ಕಾರಿ ನೇಮಕಾತಿಗಳ ವಿಷಯದಲ್ಲಿ ಖಡಕ್ ಎಂದೇ ಹೆಸರುವಾಸಿಯಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಇದೀಗ ರಾಜ್ಯ ಮಾಹಿತಿ ಹಕ್ಕು ಆಯುಕ್ತರ ನೇಮಕಾತಿ ವಿಷಯ ತಲೆನೋವಾಗಿ ಪರಿಣಮಿಸಿದೆ.
|
3 |
+
ರಾಜ್ಯದಲ್ಲಿ ಮುಖ್ಯ ಮಾಹಿತಿ ಹಕ್ಕು ಅಯುಕ್ತರು ಸೇರಿದಂತೆ ಹತ್ತು ಮಂದಿ ಮಾಹಿತಿ ಆಯುಕ್ತರ ಹುದ್ದೆಗಳಿದ್ದು,ಈ ಪೈಕಿ ಎಂಟು ಹುದ್ದೆಗಳು ಖಾಲಿಯಾಗಿವೆ. ಹೀಗಾಗಿ ಈ ಹುದ್ದೆಗಳನ್ನು ಭರ್ತಿ ಮಾಡಲು ತಯಾರಿ ನಡೆಸಿದ ರಾಜ್ಯ ಸರ್ಕಾರ,ಈ ಸಂಬಂಧ ಅರ್ಜಿಗಳನ್ನು ಆಹ್ವಾನಿಸಿತ್ತು.ಹೀಗೆ ಸರ್ಕಾರ ಅರ್ಜಿ ಆಹ್ವಾನಿಸಿದ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗಳಿಗೆ ನಿವೃತ್ತ ಐಎಎಸ್,ಐಪಿಎಸ್ ಅಧಿಕಾರಿಗಳು,ಪತ್ರಕರ್ತರು ಸೇರಿದಂತೆ ಐನೂರಕ್ಕೂ ಹೆಚ್ಚು ಮಂದಿ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ.
|
4 |
+
ಮೂಲಗಳ ಪ್ರಕಾರ, ಇಂತಹ ಅರ್ಜಿಗಳನ್ನು ಪರಿಶೀಲಿಸಿ ಮಾಹಿತಿ ಹಕ್ಕು ಆಯಕ್ತರ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸ ಹಲವು ದಿನಗಳ ಹಿಂದೆಯೇ ಪೂರ್ಣವಾಗಬೇಕಿತ್ತು. ಇಂತಹ ಅರ್ಜಿಗಳನ್ನು ಪರಿಶೀಲಿಸಿ ಅರ್ಹರನ್ನು ಈ ಹುದ್ದೆಗಳಿಗೆ ನೇಮಕ ಮಾಡುವ ಸಂಬಂಧ ಮುಖ್ಯಮಂತ್ರಿಗಳು ಸಂಬಂಧ ಪಟ್ಟ ಕಡತವನ್ನು ಪರಿಶೀಲಿಸಬೇಕಿತ್ತು. ಆದರೆ ಇದೀಗ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗಳಿಗೆ ಪ್ರಭಾವ ಬೀರುತ್ತಿರುವವರನ್ನು ನೋಡಿ ಮುಖ್ಯಮಂತ್ರಿಗಳಿಗೆ ತಲೆನೋವು ಶುರುವಾಗಿದೆ.
|
5 |
+
ಮೂಲಗಳ ಪ್ರಕಾರ, ಈ ಹುದ್ದೆಗಳಿಗೆ ಇಂತವರನ್ನು ನೇಮಕ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ,ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ನಾಯಕ ಟೈಟ್ಲರ್,ಸಾಹಿತ್ಯ ಲೋಕದ ಮೇರು ಪ್ರಶಸ್ತಿಯನ್ನು ಗಳಿಸಿದ ಸಾಹಿತಿಗಳು ಸೇರಿದಂತೆ ಹಲವರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.
|
6 |
+
ಕುತೂಹಲದ ಸಂಗತಿ ಎಂದರೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿದ್ದಾಗ ಮಾತ್ರವಲ್ಲ,ಮೈಸೂರು ಸೇರಿದಂತೆ ವಿವಿಧ ಕಡೆ ಪ್ರವಾಸಗಳಿಗೆ ಹೋದರೂ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗೆ ಇಂತವರನ್ನು ನೇಮಕ ಮಾಡಿ ಎಂದು ಹೇಳಲು ಪ್ರಭಾವಿಗಳು ಮುಗಿಬೀಳುತ್ತಿದ್ದಾರೆ.
|
7 |
+
ಹೀಗೆ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗಳಿಗೆ ಬರುತ್ತಿರುವ ಪ್ರಭಾವವನ್ನು ನೋಡಿ ತಲೆ ಬಿಸಿ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು,ಸ್ವಲ್ಪ ದಿನ ಈ ಕಡತವನ್ನು ಕೊಡಲೇಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
|
eesanje/url_46_22_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಉಗ್ರ ಚಟುವಟಿಕೆ ನಿಯಂತ್ರಿಸಲು ಟಾಸ್ಕ್ಫೋರ್ಸ್ ರಚನೆಗೆ ಆರ್.ಅಶೋಕ್ ಆಗ್ರಹ
|
2 |
+
ಬೆಂಗಳೂರು,ಸೆ.10– ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್ ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್ ಕಾರ್ಡ್ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ.
|
4 |
+
ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕು ಎಂದು ಆಗ್ರಹಿಸಿದರು.ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ.
|
5 |
+
ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ. ನಮ ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗಬಾರದು. ಸ್ಲೀಪರ್ ಸೆಲ್ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.
|
6 |
+
ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್ ಸಚಿವರು ನಿರಾಕರಿಸಿದ್ದರು. ಪದೇ ಪದೆ ಭಯೋತ್ಪಾದಕರಿಗೆ ಪ್ರೇರಣೆಯಾಗುವ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ನೀಡಿದ್ದಾರೆ. ಇದರಿಂದಾಗಿ ಭಯೋತ್ಪಾದನೆಗೆ ಕುಮಕ್ಕು ದೊರೆತಿದೆ.
|
7 |
+
ಕರ್ನಾಟಕದಲ್ಲೇ ಭಯೋತ್ಪಾದನೆ ಮಾಡಿದರೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ. ಇದಕ್ಕಾಗಿ ಇಲ್ಲಿ ಹೆಚ್ಚು ಉಗ್ರ ಚಟುವಟಿಕೆ ನಡೆಯುತ್ತಿದೆ ಎಂದು ದೂರಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದಾಗ, ಇದು ವ್ಯಾಪಾರ ವ್ಯಾಜ್ಯ ಎಂದು ಸಚಿವರು ಹೇಳಿದ್ದರು.
|
8 |
+
ಇದರಿಂದಾಗಿಯೇ ಭಯೋತ್ಪಾದನಾ ಚಟುವಟಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಮೇಶ್ವರಂ ಕೆಫೆ ಬದಲಾಗಿ ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸಬೇಕೆಂದು ಯೋಜನೆ ರೂಪಿಸಲಾಗಿತ್ತು. ಈ ಪ್ರಕರಣದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲಾನ್ ಮಾಡಲಾಗಿತ್ತು ಎಂದರು.
|
9 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿಗಿಂತಲೂ ಕ���ಂಗ್ರೆಸ್ ನಾಯಕರಿಗೆ ಹೆಚ್ಚಿನ ವಿಶ್ವಾಸವಿದೆ. ಅದಕ್ಕಾಗಿ ಸಿಎಂ ಕುರ್ಚಿಗೆ ಸ್ಪರ್ಧೆ ಹೆಚ್ಚಿದ್ದು, ಎಲ್ಲರೂ ಮುಖ್ಯಮಂತ್ರಿ ಆಗುತ್ತೇನೆಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಅವರು ದೂರಿದರು.
|
eesanje/url_46_22_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರು ದಂಡ ಕಟ್ಟಲು ರೆಡಿಯಾಗಿ
|
2 |
+
ಬೆಂಗಳೂರು,ಸೆ.10-ನೀವು ಇನ್ನು ನಿಮ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳದಿದ್ದರೆ ದಂಡ ಕಟ್ಟಲು ರೆಡಿಯಾಗಿ.ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸೆ.15 ಕೊನೆ ದಿನವಾಗಿದ್ದು ಆ ನಂತರ ನಂಬರ್ ಪ್ಲೇಟ್ ಹಾಕಿಸಿಕೊಳ್ಳದವರಿಗೆ 500 ದಂಡ ವಿಧಿಸಲು ಆರ್ಟಿಒ ಹಾಗೂ ಟ್ರಾಫಿಕ್ ಪೊಲೀಸರು ತೀರ್ಮಾನಿಸಿದ್ದಾರೆ.
|
3 |
+
ಮುಂದಿನ ಸೋಮವಾರದಿಂದ ಆರ್ ಟಿಓ ಜೊತೆಗೆ ಟ್ರಾಫಿಕ್ ಪೊಲೀಸರು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳ ಪತ್ತೆಗೆ ವಿಶೇಷ ಕಾರ್ಯಚರಣೆ ಹಮಿಕೊಳ್ಳಲಿದ್ದಾರೆ.ಹೀಗಾಗಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳಲು ಇನ್ನು ಒಂದು ವಾರ ಸಮಯವಿದ್ದು ಅಷ್ಟರೊಳಗೆ ನಂಬರ್ ಪ್ಲೇಟ್ ಅಳವಡಿಸಿಕೊಂಡು ದಂಡ ಕಟ್ಟುವುದರಿಂದ ಪಾರಾಗಬಹುದಾಗಿದೆ.
|
4 |
+
ಈ ಹಿಂದೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಸರ್ಕಾರ ಮೂರು ಬಾರಿ ವಿಸ್ತರಣೆ ಮಾಡಿತ್ತು. ಇದರ ಜೊತೆಗೆ ನ್ಯಾಯಾಲಯ ಕೂಡ ಸೆ.15ರವರೆಗೆ ಸಮಯ ನೀಡಿತ್ತು.ಇದೀಗ ಅ ಗಡುವ ಮುಗಿಯಲು ಇನ್ನು ಒಂದು ವಾರ ಇರುವುದರಿಂದ ನಂಬರ್ ಪ್ಲೇಟ್ ಹಾಕಿಸಿಕೊಳ್ಳದಿರುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಪೊಲೀಸರು ನಿರ್ಧರಿಸಿದ್ದಾರೆ.
|
5 |
+
ಅರ್ ಟಿ ಓ ಮಾಹಿತಿ ಪ್ರಕಾರ ನಗರದಲ್ಲಿ ಸದ್ಯ 51 ಲಕ್ಷ ವಾಹನ ವಾಹನ ಸವಾರರು ತಮ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಂಡಿದ್ದಾರೆ. ಉಳಿದ 1.49 ಕೋಟಿ ವಾಹನ ಮಾಲೀಕರು ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ವಂತೆ.
|
6 |
+
ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಮೊದಲ ಬಾರಿ 500 ರೂ ದಂಡ ನಂತರೂ ಎಚ್ಚೆತ್ತುಕೊಳ್ಳದಿದ್ದರೆ ಒಂದು ಸಾವಿರ ರೂ.ಗಳ ದಂಡ ವಿಧಿಸಲಾಗುವುದು ಎಂದು ಸಾರಿಗೆ ಆಯುಕ್ತ ಮಲ್ಲಿಕಾರ್ಜುನ ಎಚ್ಚರಿಸಿದ್ದಾರೆ.
|
eesanje/url_46_22_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ದರ್ಶನ್ ಚಾರ್ಜ್ಶೀಟ್ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ
|
2 |
+
|
3 |
+
ಬೆಂಗಳೂರು,ಸೆ.10-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಕುರಿತಂತೆ ಆರೋಪ ಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ನೀಡಿದೆ.
|
4 |
+
ದೋಷಾರೋಪಣ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಯನ್ನು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಬೇಕೆಂದು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನ್ಗೌಡರ್ ರವರು ಇದ್ದ ಪೀಠ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಆದೇಶಿಸಿದ್ದಾರೆ.
|
5 |
+
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು 3,992 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.ದೋಷಾರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಮಾಧ್ಯಮಗಳು ಪ್ರಸಾರ ಮಾಡಬಾರದು, ಆರೋಪಪಟ್ಟಿಯಲ್ಲಿರುವ ಮಾಹಿತಿ ಸೋರಿಕೆ ಮಾಡದಂತೆ ಪೊಲೀಸರಿಗೆ ಸೂಚಿಸಬೇಕು ಎಂದು ನಿನ್ನೆ ಹೈಕೋರ್ಟ್ಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
|
6 |
+
ಅರ್ಜಿಯನ್ನು ಸ್ವೀಕರಿಸಿದ್ದ ನ್ಯಾಯಾಲಯ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳು ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿ ಆದೇಶ ನೀಡಿದ್ದಾರೆ.
|
eesanje/url_46_22_6.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಕಚೇರಿ ಸ್ಫೋಟಕ್ಕೆ ಉಗ್ರರ ಸಂಚು, ಚಾರ್ಜ್ಶೀಟ್ನಲ್ಲಿ ಬಹಿರಂಗ, ಭದ್ರತೆ ಹೆಚ್ಚಳ
|
2 |
+
:
|
3 |
+
ಬೆಂಗಳೂರು,ಸೆ.10-ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೊಂಡಿದ್ದು, ಚಾರ್ಜ್ಶೀಟ್ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
|
4 |
+
ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿರುವ ಮಿಕ್ಕ ವಿಚಾರಗಳು ಗೊತ್ತಿಲ್ಲ ಎಂದರು.ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ವಕೀಲರಿಗೂ ಚಾರ್ಜ್ಶೀಟ್ ನೀಡಲಾಗುತ್ತದೆ.
|
5 |
+
ಚಾರ್ಜ್ಶೀಟ್ ಗೌಪ್ಯ ದಾಖಲಾತಿ ಏನೂ ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್ಶೀಟ್ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆ ಕಾದು ನೋಡೋಣ ಎಂದು ಹೇಳಿದರು.
|
6 |
+
ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್ಗೆ ನೀಡುತ್ತಾರೆ. ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದರು.
|
7 |
+
ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಎಂದು ಏಕೆ ಹೇಳಬೇಕು ಎಂದು ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದು ಹೇಳಿದರು.
|
8 |
+
ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ? ಈ ಬಗ್ಗೆ ಚರ್ಚೆಯೇ ಅನಗತ್ಯ ಎಂದರು.
|
9 |
+
ಬಿಜೆಪಿ ಕಚೇರಿಗೆ ಭದ್ರತೆ ಹೆಚ್ಚಳ :ಸುರಕ್ಷತೆಯ ದೃಷ್ಟಿಯಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.ಮಲ್ಲೇಶ್ವರ ಬಿಜೆಪಿ ಕಚೇರಿ ಸ್ಫೋಟಕ್ಕೆ ಉಗ್ರರ ಸಂಚು ರೂಪಿಸಿದ ವಿಚಾರವು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಚಾರ್ಜ್ಶೀಟ್ನಲ್ಲಿ ಉಲ್ಲೇಖವಾದ ಬೆನ್ನಲ್ಲೇ ಬಿಜೆಪಿ ಕಚೇರಿ ಎದುರು ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ.
|
10 |
+
ಮೆಟಲ್ ಡಿಟೆಕ್ಟರ್ ಮೂಲಕವೇ ಬಿಜೆಪಿ ಕಚೇರಿಗೆ ಬರುವವರ ಒಳ ಪ್ರವೇಶ ಕಡ್ಡಾಯ ಮಾಡಲಾಗಿದೆ. ಇದರ ಜತೆಗೆ ಪ್ರವೇಶ ದ್ವಾರದ ಎದುರು 3-4 ಜನ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಮಲ್ಲೇಶ್ವರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್್ಸಪೆಕ್ಟರ್ಗಳು ಬಿಜೆಪಿ ಕಚೇರಿಗೆ ನಿತ್ಯ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
|
11 |
+
ಹೆಚ್ಚಿನ ಭದ್ರತೆಗೆ ಕಾರಣ:ಅಯೋಧ್ಯೆಯಲ್ಲಿ ಬಾಲ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ದಿನವೇ ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚನ್ನು ಐಸಿಸ್ ಶಂಕಿತ ಉಗ್ರರು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ಎನ್ಐಎ ತನಿಖೆಯಲ್ಲಿ ಬಯಲಾಗಿತ್ತು.
|
12 |
+
ಬ್ರೂಕ್ಫೀಲ್ಡ್ ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿದ್, ಅಬ್ದುಲ್ ಮತೀನ್ ತಾಹ, ಮಾಜ್ ಮುನೀರ್ ಅಹಮದ್, ಮುಜಾಮಿಲ್ ಷರೀಫ್ ವಿರುದ್ಧ ಎನ್ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.
|
eesanje/url_46_22_7.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕರ್ನಾಟಕದಲ್ಲಿ ವ್ಯಾಪಾರಕ್ಕೆ ಮುಕ್ತ ಅವಕಾಶ : ಸದುಪಯೋಗಪಡಿಸಿಕೊಳ್ಳುವಂತೆ ಉದ್ಯಮಿಗಳಿಗೆ ಸಿಎಂ ಕರೆ
|
2 |
+
|
3 |
+
ಬೆಂಗಳೂರು,ಸೆ.10-ಕರ್ನಾಟಕ ರಾಜ್ಯ ವ್ಯಾಪಾರ ವ್ಯವಹಾರಗಳಿಗೆ ಮುಕ್ತವಾಗಿದ್ದು, ಇಲ್ಲಿನ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯಮಿಗಳಿಗೆ ಕರೆ ನೀಡಿದ್ದಾರೆ.ವಿಧಾನಸೌಧದ ಸಮೇಳನ ಸಭಾಂಗಣದಲ್ಲಿಂದು ಅಮೆರಿಕ ಮತ್ತು ಭಾರತದ ವ್ಯವಹಾರಿಕ ಪರಿಷತ್ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ, ವೈಮಾನಿಕ ಹಾಗೂ ಬಾಹ್ಯಾಕಾಶ ಸೇರಿಂದತೆ ಹಲವು ಕ್ಷೇತ್ರಗಳಲ್ಲಿನ ಜಾಗತಿಕ ಸವಾಲುಗಳನ್ನು ಎದುರಿಸಲು ಸಹಕಾರ ನೀಡುವಂತೆ ಸಲಹೆ ನೀಡಿದ್ದಾರೆ.
|
4 |
+
ಭಾರತ ಮತ್ತು ಅಮೆರಿಕ ಒಟ್ಟಾಗಿ ಸಮಸ್ಯೆಗಳಿಗೆ ಪರಿಹಾರ ಹುಡುಕಬೇಕು. ಅಮೆರಿಕದೊಂದಿಗೆ ಕರ್ನಾಟಕ ಸದೃಢ ಮತ್ತು ಕ್ರಿಯಾತಕ ಪಾಲುದಾರಿಕೆಯನ್ನು ಹೊಂದಿದೆ. ಇಂದಿನ ಸಭೆಯಲ್ಲಿ ವ್ಯವಹಾರಿಕ ಅವಕಾಶಗಳನ್ನಷ್ಟೇ ಚರ್ಚೆ ಮಾಡುತ್ತಿಲ್ಲ, ಹಿಂದಿಗಿಂತಲೂ ಹೆಚ್ಚಿನ ಸಂಪರ್ಕ ಹಾಗೂ ಭವಿಷ್ಯದಲ್ಲಿ ಸಮೃದ್ಧಿಯಾಗಿ ನೀಲನಕ್ಷೆಯನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ.
|
5 |
+
ದೃಢವಾದ ವ್ಯವಹಾರಗಳನ್ನು ಘೋಷಿಸುವ ಬದ್ಧತೆ ಅಚಲವಾಗಿದೆ. ಅಭಿವೃದ್ಧಿ ಮತ್ತು ಯಶಸ್ಸಿಗೆ ಪೂರಕ ವಾತಾವರಣ ನಿರ್ಮಿಸಲು ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.ಕರ್ನಾಟಕ ವೈವಿಧ್ಯ ಸಂಪನೂಲಗಳ ನಾಡು. ಕೌಶಲ್ಯಭರಿತ ಕಾರ್ಯಪಡೆಗಳಿಂದ ಹಿಡಿದು ನೈಸರ್ಗಿಕ ಸಂಪತ್ತಿನವರೆಗೂ ವೇಗವಾಗಿ ದೊರೆಯುತ್ತಿರುವ ನವೋದ್ಯಮಗಳಿಂದ ಹಿಡಿದು ಸದೃಢ ಉತ್ಪಾದನಾ ತಳಪಾಯದವರೆಗೂ ಎಲ್ಲಾ ಸಾಧ್ಯಗಳೂ ಇಲ್ಲಿವೆ.
|
6 |
+
ಜಗತ್ತಿನ ಐಟಿಬಿಟಿ, ಬಯೋಟೆಕ್ನಾಲಜಿ ಉದ್ಯಮಗಳಿಗೆ ಹಾಗೂ ನವೋದ್ಯಮಗಳಿಗೆ ಕರ್ನಾಟಕ ತವರೂರಾಗಿದೆ. ನಾವೀನ್ಯತೆ, ಸುಲಭ ವ್ಯವಹಾರಿಕ ಅವಕಾಶಗಳು, ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ನೀತಿಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
|
7 |
+
ಕರ್ನಾಟಕ ಅಪಾರ ಅವಕಾಶಗಳನ್ನು ಒದಗಿಸುವ ರಾಜ್ಯಗಳಾಗಿದ್ದು, ನಮ ಜನ ಹಾಗೂ ಜಾಗತಿಕ ಸಮುದಾಯದ ಭವಿಷ್ಯಕ್ಕಾಗಿ ಇಲ್ಲಿನ ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿ ವಾತಾವರಣವನ್ನು ಬಳಸಿಕೊಳ್ಳುವಂತೆ ಕರೆ ನೀಡಿದ್ದಾರೆ.
|
8 |
+
ಸಮೃದ್ಧಿ, ಪಾಲುದಾರಿಕೆ ಮತ್ತು ಪ್ರಗತಿಯ ಭವಿಷ್ಯದತ್ತ ಒಟ್ಟಾಗಿ ಹೆಜ್ಜೆ ಇಡುವ ಜೊತೆಗೆ ಇಂದಿನ ಚರ್ಚೆ ಭವಿಷ್ಯದ ಪಾಲುದಾರಿಕೆಯನ್ನು ಮತ್ತಷ್ಟು ಸದೃಢಗೊಳಿಸಲಿದೆ. ಅಮೆರಿಕ ಮತ್ತು ಕರ್ನಾಟಕದ ನಡುವೆ ಪರಸ್ಪರ ಲಾಭದಾಯಕ ಫಲಿತಾಂಶಗಳು ಸಂಭವಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
|
9 |
+
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
|
eesanje/url_46_22_8.txt
ADDED
@@ -0,0 +1,15 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಾಲ್ಮೀಕಿ ಹಗರಣ ಚಾರ್ಜ್ ಶೀಟ್ ಸಲ್ಲಿಕೆ, ಮಾಜಿ ಸಚಿವ ನಾಗೇಂದ್ರ ಕಿಂಗ್ ಪಿನ್
|
2 |
+
,
|
3 |
+
ಬೆಂಗಳೂರು,ಸೆ.10-ರಾಜ್ಯ ಸರ್ಕಾರದ ಅಸ್ತಿತ್ವವನ್ನೇ ಅಲುಗಾಡಿಸಿದ ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಪ್ರಮುಖ ಕಿಂಗ್ಪಿನ್ ಮಾಜಿ ಸಚಿವ ಬಿ.ನಾಗೇಂದ್ರ ಎಂಬುದು ದೋಷಾರೋಪ ಪಟ್ಟಿ(ಜಾರ್ಜ್ಶೀಟ್)ಯಲ್ಲಿ ಉಲ್ಲೇಖವಾಗಿದೆ.
|
4 |
+
ಪ್ರಕರಣದ ತನಿಖೆ ನಡೆಸಿರು ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ವಿಶೇಷವೆಂದರೆ ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಶಿವಮೊಗ್ಗ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾರ್ಜ್ಶೀಟ್ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹೆಸರನ್ನು ಉಲ್ಲೇಖ ಮಾಡದೆ ಕೇವಲ ಅಧಿಕಾರಿಗಳ ಪಾತ್ರ ಕುರಿತು ಉಲ್ಲೇಖ ಮಾಡಿತ್ತು.
|
5 |
+
ಇದಕ್ಕೆ ತದ್ವಿರುದ್ಧವಾಗಿ ಇ.ಡಿ ಮಾಜಿ ಸಚಿವ ಬಿ.ನಾಗೇಂದ್ರ, ಸತ್ಯನಾರಾಯಣ ವರ್ಮ ಅವರುಗಳೇ ಈ ಪ್ರಕರಣದ ಪ್ರಮುಖ ರೂವಾರಿಗಳೆಂಬುದನ್ನು ಪತ್ತೆ ಮಾಡಿದೆ.ಹೈದರಾಬಾದ್ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ 187 ಕೋಟಿ ರೂ. ಹಗರಣ ನಡೆದಿದೆ.
|
6 |
+
21 ಕೋಟಿ ರೂ.ಗಳನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಹಣ ವರ್ಗಾವಣೆ ನಡೆದಿದೆ ಎಂದು ಚಾರ್ಜ್ಶೀಟ್ನಲ್ಲಿ ಜಾರಿನಿರ್ದೇಶನಾಲಯ ಉಲ್ಲೇಖಿಸಿದೆ. ನಾಗೇಂದ್ರ ಅವರ ಸೂಚನೆಯಂತೆಯೇ ಅಕೌಂಟ್ ಓಪನ್ ಮಾಡಲಾಗಿದೆ ಎಂದು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದನಾಭ್ ಹೇಳಿಕೆ ಕೊಟ್ಟಿದ್ದಾರೆ.
|
7 |
+
ಶಾಂಗ್ರಿಲಾ ಹೋಟೆಲ್ನಲ್ಲಿನ ನಡೆದ ಸಭೆಯಲ್ಲಿ ನಾಗೇಂದ್ರ ಬಂದು-ಹೋಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಇದಿಷ್ಟೇ ಅಲ್ಲ, ಶಾಂಗ್ರಿಲಾ ಹೋಟೆಲ್ನಲ್ಲಿ ಮಹಜರು ಪ್ರಕ್ರಿಯೆ ವೇಳೆ ಅನೇಕ ಸಾಕ್ಷಿಗಳು ದೊರೆತಿವೆ.
|
8 |
+
ನಾಗೇಂದ್ರ, ಪಿಎ ದೇವೇಂದ್ರಪ್ಪ, ನೆಕ್ಕಂಟಿ ನಾಗರಾಜ್, ನಾಗೇಶ್ವರ್ ರಾವ್ ಸಭೆಯಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ನಾಗೇಂದ್ರ ಸೂಚನೆಯಂತೆಯೇ ಹಗರಣದಲ್ಲಿ ಭಾಗಿ ಎಂದು ಆರೋಪಿಗಳು ಹೇಳಿಕೆಕೊಟ್ಟಿದ್ದಾರೆ. ಹಾಗೇ ಮೃತ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ನಲ್ಲಿ ಸಚಿವ ಎಂಬುದು ಉಲ್ಲೇಖವಾಗಿದೆ.
|
9 |
+
ನಾಗೇಂದ್ರ ಆಪ್ತ ಹರೀಶ್ಗೆ ಪದನಾಭ್ 25 ಲಕ್ಷ ರೂ. ನೀಡಿರುವುದು ಕೂಡ ಬಯಲಾಗಿದೆ. ಹರೀಶ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಣ ಪಡೆದಿರೋ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಇಡಿ ದಾಳಿಯಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಅನೇಕ ದಾಖಲೆಗಳು ಸಿಕ್ಕಿವೆ.
|
10 |
+
ನಾಗೇಂದ್ರ-ದದ್ದಲ್ ಹೆಸರು ಇರಲಿಲ್ಲ:ವಾಲೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಪೊಲೀಸರು 12 ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ಆಗಸ್ಟ���ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ , ಬಸನಗೌಡ ದದ್ದಲ್ ಅವರ ಹೆಸರನ್ನು ಉಲ್ಲೇಖಿಸಿರಲಿಲ್ಲ.
|
11 |
+
ಸತ್ಯಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲೀಕಿ ನಿಗಮ ಎಂಡಿ ಪದನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು.
|
12 |
+
ಏನಿದು ಹಗರಣ?:ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಎಂಜಿರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು.
|
13 |
+
ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಸೇರಿದಂತೆ ಅನೇಕರನ್ನು ಎಸ್ಐಟಿ ಬಂಧಿಸಿ ವಿಚಾರಣೆ ನಡೆಸಿತ್ತು.ನಿಗಮದ ಅಧಿಕಾರಿಗಳ ಪ್ರಕಾರ, ಈ ವಿಚಾರ ಅವರಿಗೆ ಗೊತ್ತಿಲ್ಲವಂತೆ. ಆದರೆ ಆರ್ಥಿಕ ವರ್ಷದ ಕೊನೆದ ದಿನವಾದ ಮಾರ್ಚ್ 31 ರಂದು ವಾಲೀಕಿ ನಿಗಮದ ಆಡಳಿತ ಮಂಡಳಿ ಸಭೆ (ಬೋರ್ಡ್ ಮೀಟಿಂಗ್) ನಡೆಸಿ187.33 ಕೋಟಿ ರೂ.ಗಳ ಪೈಕಿ 50 ಕೋಟಿ ರೂ.ಗಳನ್ನು 13 ತಿಂಗಳ ಅವಧಿಗೆ ಠೇವಣಿ ಇಡುವ ಠರಾವು ಮಾಡಲಾಯಿತು.
|
14 |
+
ಆ ಠೇವಣಿ ಮೊತ್ತದ ಗ್ಯಾರಂಟಿ ಆಧಾರದ ಮೇಲೆ 45 ಕೋಟಿ ರೂ.ಗಳನ್ನು ಅದೇ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಅದೇ ದಿನ 9 ಫಲಾನುಭವಿಗಳು ಹೈದರಾಬಾದ್ನ ರತ್ನಾಕರ ಬ್ಯಾಂಕ್ನಲ್ಲಿ ಖಾತೆ ತೆರೆದರು. ಹೆಸರಿಗೆ 9 ಖಾತೆಗಳನ್ನು ತೆರೆದದ್ದು ದೇಶದ ಪ್ರತಿಷ್ಠಿತ ಕಂಪನಿಗಳೇ ಆದರೂ ವಾಸ್ತವವಾಗಿ ಆ ಕಂಪನಿಗಳ ಹೆಸರಲ್ಲಿ ನಕಲಿ ವ್ಯಕ್ತಿಗಳು ಖಾತೆ ತೆರೆದಿದ್ದರೆಂಬ ಆರೋಪವಿದೆ.
|
15 |
+
ಯಾರಿಗೆ ಎಷ್ಟು ವರ್ಗಾವಣೆ?:ಸಿಸ್ಟಮ್ ಸರ್ವಿಸ್ ಕಂಪನಿ: 4.55 ಕೋಟಿರಾಮ್ ಎಂಟರ್ಪ್ರೈಸಸ್: 5.05 ಕೋಟಿಸ್ಕಿಲ್ ಮ್ಯಾಪ್ ಟ್ರೈನಿಂಗ್ ಸರ್ವಿಸಸ್: 4.84 ಕೋಟಿಸ್ಯಾಪ್ ಡಿಸೈನ್ ಪ್ರೈ.ಲಿ: 5.15 ಕೋಟಿಜಿ ಎನ್ ಇಂಡಸ್ಟ್ರೀಸ್: 4.42 ಕೋಟಿನೋವೆಲ್ ಸೆಕ್ಯೂರಿಟಿ ಸರ್ವಿಸಸ್: 4.56 ಕೋಟಿಸುಜಲ್ ಎಂಟರ್ಪ್ರೈಸಸ್: 5.63 ಕೋಟಿಗ್ರ್ಯಾಬ್ ಎ ಗ್ರಬ್ ಕಂಪನಿ: 5.88 ಕೋಟಿಅಕಾರ್ಡ್ ಬ್ಯುಸಿನೆಸ್ ಸರ್ವಿಸಸ್: 5.46 ಕೋಟಿಹ್ಯಾಪಿಯೆಸ್ಟ್ ಮೈಂಡ್್ಸ ಟೆಕ್ನಾಲಜಿ: 4.53 ಕೋಟಿಮನ್ಹು ಎಂಟರ್ಪ್ರೈಸಸ್: 5.10 ಕೋಟಿ
|
eesanje/url_46_22_9.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರೇಣುಕಾಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಇನ್ನಿಲ್ಲದ ಪ್ರಯತ್ನ ಮಾಡಿದ್ದ ದರ್ಶನ್ ಗ್ಯಾಂಗ್
|
2 |
+
|
3 |
+
ಬೆಂಗಳೂರು,ಸೆ.10-ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ದರ್ಶನ್ ಗ್ಯಾಂಗ್ ಇನ್ನಿಲ್ಲದ ಪ್ರಯತ್ನ ಮಾಡಿರುವುದು ಆರೋಪಿಗಳ ಹೇಳಿಕೆಗಳಿಂದ ತಿಳಿದುಬಂದಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸುಮನಹಳ್ಳಿ ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾದ ನಂತರ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಿದರು.
|
4 |
+
ಈ ವಿಷಯ ಪವಿತ್ರಾ ಗೌಡಗೆ ದರ್ಶನ್ ಗ್ಯಾಂಗ್ನಿಂದ ಗೊತ್ತಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತನ್ನ ಗೆಳತಿಯ ಪತಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವುದು ತಿಳಿದು ಗೆಳತಿಯನ್ನು ಕಾಫಿಗಾಗಿ ಹೋಟೆಲ್ಗೆ ಕರೆಸಿಕೊಂಡಿದ್ದಾಳೆ. ನಂತರ ಆಕೆಯ ಮನೆಗೆ ಹೋಗಿ ಗೆಳತಿಯ ಪತಿಯಿಂದ ರೇಣುಕಾಸ್ವಾಮಿ ಮೃತದೇಹದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾಳೆ.
|
5 |
+
ನಮ ಸಂಬಂಧಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರ ಮೃತದೇಹ ಸುಮನಹಳ್ಳಿ ರಾಜಕಾಲುವೆಯಲ್ಲಿ ಪತ್ತೆಯಾಗಿದೆ. ಆ ಬಗ್ಗೆ ನಿಮ ಪತಿಯಿಂದ ವಿಷಯ ತಿಳಿದುಕೊ ಎಂದು ಗೆಳತಿಗೆ ಪವಿತ್ರ ಹೇಳಿದ್ದಾಳೆ.ಆ ಬಳಿಕ ಗೆಳತಿ ತನ್ನ ಪತಿಯೊಂದಿಗೆ ಈ ಕುರಿತು ಮಾತನಾಡಿದ್ದು, ಈಕೆಯ ಕೋರಿಕೆಯಂತೆ ಅವರು ರೇಣುಕಾಸ್ವಾಮಿಯ ಫೋಟೋಗಳನ್ನು ಕಳುಹಿಸಿದಾಗ, ಆ ಫೋಟೋಗಳನ್ನು ಪವಿತ್ರಾಗೆ ತೋರಿಸಿದ್ದಾರೆ.
|
6 |
+
ತದನಂತರ ಈ ವಿಷಯವನ್ನು ಪವಿತ್ರಾ ಅಂದು ರಾತ್ರಿ ದರ್ಶನ್ಗೆ ಕರೆ ಮಾಡಿ ಇದರ ಬಗ್ಗೆ ತಿಳಿಸಿದ್ದಾಳೆ. ಮತ್ತೆ ದರ್ಶನ್ ಕರೆ ಮಾಡುತ್ತಿದ್ದಂತೆ ಪವಿತ್ರಾ ಗಾಬರಿಯಾಗಿ ಮನೆಗೆ ಹೋಗಿದ್ದಾಳೆ.ಕೆಲ ಸಮಯದ ಬಳಿಕ ಪವಿತ್ರಾಳ ಗೆಳತಿಗೆ ಸ್ಟೋಟಿಬ್ರೋಕ್ ಮಾಲೀಕ ವಿನಯ್ ಕರೆ ಮಾಡಿ, ಸುಮನಹಳ್ಳಿ ರಾಜಕಾಲುವೆಯಲ್ಲಿ ಪತ್ತೆಯಾದ ಶವದ ಮರಣೋತ್ತರ ಪರೀಕ್ಷೆ ವೇಳೆ ನಿಮ ಪತಿಗೆ ಹೇಳಿ ನಮಗೆ ಸಹಾಯ ಮಾಡುವಂತೆ ಕೇಳಿದಾಗ, ಅದು ಸಾಧ್ಯವಿಲ್ಲ ಎಂದು ಪವಿತ್ರಾ ಗೆಳತಿ ಗಾಬರಿಯಾಗಿ ತಕ್ಷಣ ಫೋನ್ ಸ್ಥಗಿತಗೊಳಿಸಿದ್ದಾರೆ.
|
7 |
+
ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬಂದು ಹಲ್ಲೆ ಮಾಡಿ ನಂತರ ರಾಜಕಾಲುವೆಗೆ ಬಿಸಾಡಿದ್ದರು. ಹಣಕಾಸು ವಿಚಾರವಾಗಿ ನಾವೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡು ನಾಲ್ಕು ಮಂದಿಗೆ ಶರಣಾಗುವಂತೆ ಹೇಳಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು. ಆದರೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈ ಪ್ರಕರಣವನ್ನು ಚಾಣಾಕ್ಷತನದಿಂದ ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
|
eesanje/url_46_230_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
“ನಾನೂ ಶೂದ್ರ-ನೀವೂ ಶೂದ್ರರು ಯಾಕ್ರೀ ಇದೆಲ್ಲಾ..”
|
2 |
+
ಬೆಂಗಳೂರು,ಫೆ.21- ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದರು. ವಿಧಾನಪರಿಷತ್ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ , ಸಂವಿಧಾನ ಜಾರಿಯ ಮುನ್ನಾ ದಿನ ಅಂಬೇಡ್ಕರ್ರವರು ಪಾರ್ಲಿಮೆಂಟಿನಲ್ಲಿ ಮಾಡಿದ ಭಾಷಣದ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿಗಳು ವಿವರವಾಗಿ ಮಾತನಾಡುತ್ತಿದ್ದರು.
|
3 |
+
ಈ ವೇಳೆ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು ಎನ್ನುವುದನ್ನು ನೆನಪಿಸಿದರು. ಪ್ರಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು. ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮಾತನ್ನು ಉಲ್ಲೇಖಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ಸದಸ್ಯ ಬೋಜೇಗೌಡರು ಕುವೆಂಪು ಅವರ ಮಾತು ಮುಂದುವರೆಸಿದರು.
|
4 |
+
ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳ ಪ್ರಯೋಗಕ್ಕೆ ಬಿಜೆಪಿ ಬ್ರೇಕ್
|
5 |
+
ಈ ವೇಳೆ ಮುಖ್ಯಮಂತ್ರಿಗಳು, ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ ಎಂದು ಪ್ರಶ್ನಿಸಿದರು. ಜತೆಗೆ ಈಗ ನಿಮ್ಮದು ಜೆಡಿಎಸ್ ಅಲ್ಲ ಈಗ ಜೆಡಿಸಿ ಆಗಿದೆ ಅಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಅ ಫಾರ್ ಕಮ್ಯುನಲ್ ಎಂದು ಟೇಬಲ್ ಬಡಿದರು.
|
6 |
+
ಈ ಮಧ್ಯೆ ಬಿಜೆಪಿಯ ರವಿಕುಮಾರ್ ಅವರು ಪರಿಷತ್ ವಿರೋಧ ಪಕ್ಷದ ನಾಯಕ ಪೂಜಾರಿ ಅವರಿಗೆ ಕಿವಿಯಲ್ಲಿ ಏನೋ ಹೇಳುತ್ತಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ರವಿಕುಮಾರ್ ಅವರೇ ಆರ್ಎಸ್ಎಸ್ ಹೇಳಿಕೊಟ್ಟಿದ್ದನ್ನೆಲ್ಲಾ ನೀವು ಆಮೇಲೆ ಹೇಳಿಕೊಡಿ. ನಾನು ಮಾತು ಮುಗಿಸಲು ಬಿಡಿ ಎಂದು ಹೇಳಿದರು.
|
eesanje/url_46_230_10.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ದುಬಾರಿ ಬೆಲೆಗೆ ನೀರು ಮಾರಿದರೆ ಟ್ಯಾಂಕರ್ ಪರವಾನಗಿ ರದ್ದು
|
2 |
+
ಬೆಂಗಳೂರು,ಫೆ.20- ಹೆಚ್ಚಿನ ಬೆಲೆಗೆ ನೀರು ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ನೀರಿನ ಟ್ಯಾಂಕರ್ ಪರವಾನಿಗಿ ರದ್ದುಗೊಳಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ. ನಗರದ ಕೆಲ ಪ್ರದೇಶಗಳಲ್ಲಿ ಉದ್ಬವಿಸಿರುವ ಕುಡಿಯುವ ನೀರಿನ ಅಭಾವವನ್ನು ಮನಗಂಡಿರುವ ಕೆಲ ನೀರಿನ ಟ್ಯಾಂಕರ್ಗಳ ಮಾಲೀಕರು ಬೆಲೆ ಹೆಚ್ಚಳ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ಅವರು ಈ ಆದೇಶ ಹೊರಡಿಸಿದ್ದಾರೆ.
|
3 |
+
ಇನ್ನು ಬೇಸಿಗೆ ಕಾಲ ಆರಂಭಕ್ಕೂ ಮುನ್ನವೇ ಬೆಂಗಳೂರು ಮಹಾನಗರಿಯಲ್ಲಿ ನೀರಿನ ಅಭಾವ ತಲೆದೋರಿದ್ದು, ಇಂದಿರಾನಗರ, ರಾಜಾಜಿನಗರ, ಸುಂಕದಕಟ್ಟೆ, ಸಿದ್ದಾರ್ಥ ನಗರ ಸೇರಿದಂತೆ ಹಲವು ಕಡೆ ನೀರು ಲಭ್ಯತೆ ಕಡಿಮೆಯಾಗಿದೆ. ಹೀಗಾಗಿ ಈ ಭಾಗಗಳಲ್ಲಿ ಟ್ಯಾಂಕರ್ನಲ್ಲಿ ನೀರು ಪೂರೈಕೆದಾರರು ನೀರಿನ ಟ್ಯಾಂಕ್ ಒಂದಕ್ಕೆ ಇದ್ದ ಬೆಲೆಯನ್ನು ದುಪ್ಪಟ್ಟು ದರಕ್ಕೆ ಮಾರಾಟ ಮಾಡುತ್ತಿದ್ದಾರೆ. 600 ರೂ. ಇದ್ದ ಟ್ಯಾಂಕರ್ ನೀರಿನ ದರ 1000-1200 ರುಪಾಯಿ ಗೆ ಮಾರಾಟ ಮಾಡಲಾಗುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
|
4 |
+
ಈ ಅಕ್ರಮದ ವಿರುದ್ಧ ಕ್ರಮ ಜರುಗಿಸಲು ಹೆಚ್ಚಿನ ದರ ವಸೂಲಿ ಮಾಡುವ ಟ್ಯಾಂಕರ್ ಗಳ ಟ್ರೇಡ್ ಲೈಸೆನ್ಸನ್ನು ರದ್ದುಗೊಳಿಸಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಈಗಾಗಲೇ ಎಲ್ಲಾ ವಲಯಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದು, ಹೆಚ್ಚಿನ ದರ ಪಡೆಯುವ ನೀರಿನ ಟ್ಯಾಂಕರ್ಗಳ ಮೇಲೆ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದಾರೆ. ನಿಗದಿತ ದರವನ್ನು ಪಡೆಯುವಂತೆ ಎಲ್ಲಾ ನೀರು ಮಾರಾಟಗಾರರಿಗೆ ತಿಳುವಳಿಕೆ ನೀಡಬೇಕು ಎಂದು ಸುತ್ತೋಲೆಯಲ್ಲಿ ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ, ಈ ಬಗ್ಗೆ ಒಂದು ವಾರದೊಳಗಾಗಿ ಸೂಕ್ತ ಕ್ರಮ ಜರುಗಿಸಲು ಸಹ ಹೇಳಿದ್ದಾರೆ.
|
5 |
+
ಸಿಎಂ ಉತ್ತರಕ್ಕೆ ಅತೃಪ್ತಿ : ಬಿಜೆಪಿ – ಜೆಡಿಎಸ್ ಸಭಾತ್ಯಾಗ
|
6 |
+
ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ನಗರದಲ್ಲಿ ನೀರಿನ ಹಾಹಾಕಾರ ಮುಗಿಲು ಮುಟ್ಟಿದ್ದು, ನಗರದ ಹಲವಾರು ಪ್ರದೇಶಗಳಲ್ಲಿ ಕುಡಿಯುವ ನೀರು ಸಿಗದೆ ಪರದಾಡುವಂತಾಗಿದೆ. ಕಾವೇರಿ ನೀರು ಕೊಡುತ್ತೇವೆ ಎಂದು ಜಲಮಂಡಳಿ ಅಳವಡಿಕೆ ಮಾಡಿರುವ ನಲ್ಲಿಗಳು ಕೇವಲ ನಾಮಕಾವಸ್ತೆಯಾಗಿದೆ. ನೀರಿನ ವಾಸನೆ ಕಂಡೆ ಈ ನಲ್ಲಿಗಳಿಗೆ ವರ್ಷಗಳನ್ನು ಸವೆಸಿವೆ.
|
7 |
+
ಇಲ್ಲಿನ ಸ್ಥಳೀಯ ಶಾಸಕರು ಹಾಕಿಸಿರುವ ನಲ್ಲಿ ಇದ್ದೂ ಇಲ್ಲದಂತಾಗಿದೆ. ನಗರದಲ್ಲಿರುವ ಬಹುತೇಕ ಎಲ್ಲಾ ಬೋರ್ವೆಲ್ಗಳು ನಿರ್ವಹಣೆಯಿಲ್ಲದೆ ಕೆಟ್ಟುನಿಂತಿ ರುವುದೂ ಸಾಮಾನ್ಯವಾಗಿಬಿಟ್ಟಿದೆ. ಒಟ್ಟಿನಲ್ಲಿ ಜಾಗತಿಕ ನಗರವಾಗಿ ಗುರುತಿಸಿಕೊಳ್ಳುತ್ತಿರುವ ಬೆಂಗಳೂರಿನ ಜನ ಈ ರೀತಿ ಮೂಲಭೂತ ಸೌಕರ್ಯಗಳಿಗೂ ದುಂಬಾಲು ಬೀಳಬೇಕಿರುವುದು ದುರಂತ ವಾ���ಿದೆ. ಬೇಸಿಗೆ ತೀವ್ರತೆ ಪಡೆದುಕೊಂಡಿದ್ದರೂ ಜಲಮಂಡಳಿ ಹಾಗೂ ಬಿಬಿಎಂಪಿ ಯಾವುದೇ ಸಿದ್ಧತೆ ಮಾಡಿಕೊಳ್ಳದೇ ಕೈಚೆಲ್ಲಿರುವುದು ಆತಂಕಕ್ಕೆ ಕಾರಣವಾಗಿದೆ.
|
eesanje/url_46_230_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಶಿಕ್ಷಕಿಯಿಂದ ಶ್ರೀರಾಮನಿಗೆ ಅಪಮಾನ ಪ್ರಕರಣ : ವಿದೇಶಗಳಿಂದ ಪೋಷಕರಿಗೆ ಬೆದರಿಕೆ ಕರೆ
|
2 |
+
ಮಂಗಳೂರು, ಫೆ.20- ಮಕ್ಕಳಿಗೆ ಶ್ರೀರಾಮನ ವಿಚಾರದಲ್ಲಿ ಅಪಮಾನ ಮಾಡಿ ಭಾರೀ ವಿವಾದ ಸೃಷ್ಟಿಸಿದ್ದ ಇಲ್ಲಿನ ಸಂತ ಜಿರೋಸಾ ಶಾಲೆಯ ಶಿಕ್ಷಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪೋಷಕರಿಗೆ ವಿದೇಶಗಳಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈಗಾಗಲೇ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಇದನ್ನು ಖಂಡಿಸಿ ಕೆಲವರು ವಿದೇಶಗಳಿಂದ ಮಕ್ಕಳ ಪೋಷಕರ ಚಿತ್ರಗಳನ್ನು ಅಂತರ್ಜಾಲದಲ್ಲಿ ವಿರೂಪಗೊಳಿಸಿ ಬೆದರಿಕೆ ಹಾಕುತ್ತಿರುವುದು ಬೆಳಕಿಗೆ ಬಂದಿದೆ.
|
3 |
+
ಶಾಲೆಯ ಶಿಕ್ಷಕಿ ಹಿಂದೂ ಧರ್ಮ ಅವಹೇಳನ ಮಾಡಿದ್ದಾರೆ ಎಂದು ಶಾಲೆ ಬಳಿ ಹಲವು ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಶಾಸಕರೂ ಭಾಗಿಯಾಗಿದ್ದಾರೆಂದು ಅವರ ಮೇಲೂ ಕೂಡ ಎಫ್ಐಆರ್ ದಾಖಲಾಗಿತ್ತು. ಇದು ದಕ್ಷಿಣ ಕನ್ನಡವಲ್ಲದೆ ಇಡೀ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ವಿಧಾನಸಭೆಯಲ್ಲೂ ಕೂಡ ಇದು ಪ್ರಸ್ತಾಪವಾಗಿತ್ತು.
|
4 |
+
ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚು ಬೀಸಿದ ಪತಿ
|
5 |
+
ಇದರ ನಡುವೆ ವಿದೇಶದಿಂದ ಮಕ್ಕಳ ಪೋಷಕರಿಗೆ ಬೆದರಿಕೆ ಕರೆ ಬರುತ್ತಿದ್ದು, ಈ ಸಂಬಂಧ ಕಂಕನಾಡಿ ಪೊಲೀಸರಿಗೆ ಕವಿತಾ ಎಂಬುವವರು ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದೇ ರೀತಿ ಹಲವು ವಿದ್ಯಾರ್ಥಿಗಳ ಪೋಷಕರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸುವ ಆಡಿಯೋಗಳು ಹಾಗೂ ಅಶ್ಲೀಲ ವಿಡಿಯೋಗಳನ್ನು ಕಳುಹಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಈಗ ಪೊಲೀಸರು ಅಲರ್ಟ್ ಆಗಿದ್ದು, ತನಿಖೆ ಆರಂಭಿಸಿದ್ದಾರೆ.
|
eesanje/url_46_230_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಮಾರ್ಚ್ 10 ರಂದು ಜಾಗೃತಿ ಓಟ
|
2 |
+
ಬೆಂಗಳೂರು, ಫೆ.20- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಅಂಗವಾಗಿ 10 ಕಿಲೋ ಮೀಟರ್ಗಳ ಜಾಗೃತಿ ಓಟವನ್ನು ಮಾರ್ಚ್ 10ರಂದು ಆಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯ ಪೊಲೀಸ್ ಇಲಾಖೆಗೆ 50 ವರ್ಷವಾಗಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ನಡೆಯುತ್ತಿದ್ದು, ಇದರ ಅಂಗವಾಗಿ ಭಾರತೀಯ ಸ್ಟೇಟ್ ಬ್ಯಾಂಕ್(ಎಸ್ಬಿಐ) ಸಹಯೋಗದೊಂದಿಗೆ ಫಿಟ್ನೆಸ್ ಫಾರ್ ಆಲ್ ಎಂಬ ಶೀರ್ಷಿಕೆಯಡಿ ಹಾಗೂ ಮಾದಕ ವಸ್ತು ಮುಕ್ತ ಕರ್ನಾಟಕವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 10 ಕಿಲೋ ಮೀಟರ್ ಹಾಗೂ 5 ಕಿಲೋ ಮೀಟರ್ಗಳ ಓಟವನ್ನು ಆಯೋಜಿಸಲಾಗಿದೆ.
|
3 |
+
ಈ ಓಟದ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರ ಸೇರಿದಂತೆ ಎಲ್ಲಾ ವಯೋಮಾನದ 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಮಾ. 10ರಂದು ವಿಧಾನಸೌಧದ ಮುಂಭಾಗದಿಂದ ಓಟ ಆರಂಭವಾಗಲಿದ್ದು, ಕಬ್ಬನ್ ಉದ್ಯಾನವನ ಮುಖಾಂತರ ಹಾದು ಹೋಗುವುದು. ಕರ್ನಾಟಕ ಪೊಲೀಸ್ ಬ್ಯಾಂಡ್ ತಂಡವು ಓಟದ ಪ್ರಾರಂಭದಿಂದ ಹಾದು ಹೋಗುವ ಆಯ್ದ ಸ್ಥಳಗಳಲ್ಲಿ ಬ್ಯಾಂಡ್ ಪ್ರದರ್ಶನ ನೀಡಲಿದೆ.
|
4 |
+
ಈ ಓಟವು ಹಸಿರು ಬೆಂಗಳೂರು ಮಾದಕ ವಸ್ತು ಮುಕ್ತ ಕರ್ನಾಟಕ ಮತ್ತು ಸೈಬರ್ ಕ್ರೈಂಗಳ ಬಗ್ಗೆ ಜಾಗೃತಿ ಮೂಡಿಸಲಿದೆ. 5 ಕಿಲೋ ಮೀಟರ್ ಮತ್ತು 10 ಕಿಲೋ ಮೀಟರ್ಗಳ ಪ್ರತ್ಯೇಕ ವಿಭಾಗಗಳಲ್ಲಿ ಮೂರು ಉಪವಿಭಾಗಗಳಾಗಿ ವಿಂಗಡಿಸಲಾಗಿದ್ದು, ಇದರಲ್ಲಿ ಪುರುಷರು, ಮಹಿಳೆಯರು, ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ವೃತ್ತಿಪರ ಓಟಗಾರರು ಭಾಗವಹಿಸಬಹುದಾಗಿದೆ.
|
5 |
+
ತೆರಿಗೆ ತಾರತಮ್ಯದ ವಿರುದ್ಧ ಧ್ವನಿ ಎತ್ತದಿರುವುದು 7 ಕೋಟಿ ಕನ್ನಡಿಗರಿಗೆ ಮಾಡಿದ ಅನ್ಯಾಯ ; ಸಿಎಂ
|
6 |
+
ವಿಜೇತರಿಗೆ ಮೂರು ಹಂತದ ವಿವಿಧ ಬಹುಮಾನಗಳನ್ನು ಘೋಷಣೆ ಮಾಡಿದ್ದು, ಸುಮಾರು 18 ಲಕ್ಷ ನೀಡಲು ಉದ್ದೇಶಿಸಲಾಗಿದೆ. 10 ಕಿಲೋ ಮೀಟರ್ ವಿಭಾಗದ ವಿಜೇತರಿಗೆ ತಲಾ ಒಂದು ಲಕ್ಷ ಹಾಗೂ 5 ಕಿಲೋ ಮೀಟರ್ ವಿಭಾಗದ 40 ಸಾವಿರ ಬಹುಮಾನವನ್ನು ಮಹಿಳಾ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ನೀಡಲಾಗುವುದು.ರಾಜ್ಯದ ಎಲ್ಲಾ ಜಿಲ್ಲೆಗಳ ವಿವಿಧ ದರ್ಜೆಗಳ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದಾರೆ. ಜೊತೆಗೆ ಕೆಎಸ್ಆರ್ಪಿ ಮತ್ತು ಇತರೆ ವಿಶೇಷ ಘಟಕಗಳು ಭಾಗವಹಿಸಲಿದ್ದು, ಸುಮಾರು 3ರಿಂದ 4 ಸಾವಿರ ಪೊಲೀಸ್ ಸಿಬ್ಬಂದಿ ಭಾಗವಹಿಸಲಿದ್ದಾರೆ.
|
7 |
+
ಈಗಾಗಲೇ ನೋಂದಾಣಿ ಕಾರ್ಯ ಆರಂಭವಾಗಿದ್ದು, ಸಾರ್ವಜನಿಕರು ಸಹ ನೋಂದಾಣಿ ಮಾಡಿಕೊಂಡು ಈ ಓಟದಲ್ಲಿ ಭಾಗವಹಿಸಬಹುದಾಗಿದೆ. ಈ ಓಟದಲ್ಲಿ ಭಾಗವಹಿಸುವವರಿಗೆ ಒಂದು ಟೀ-ಶರ್ಟ್, ಪದಕ ಮತ್ತು ಉಪಹಾರದ ವ್ಯವಸ್ಥೆ ಇರುತ್ತದೆ. ಆಸಕ್ತರು .click2race. ವೆಬ್ಸೈಟ್ ಮೂಲಕ ನೋಂದಾಯಿಸಿಕೊ ಳ್ಳಬಹುದಾಗಿದೆ ಎಂದು ಆಯುಕ್ತರು ತಿಳಿಸಿದರು.
|
eesanje/url_46_230_2.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಇದ್ದಕ್ಕಿದ್ದಂತೆ ಹೊತ್ತಿ ಉರಿದ ಹೊಸ ಕಾರು
|
2 |
+
ಮಹದೇವಪುರ,ಫೆ.21- ಮನೆ ಮುಂದೆ ಪಾರ್ಕಿಂಗ್ ಮಾಡಲಾಗಿದ್ದ ಹೊಸ ಕಾರು ಸುಟ್ಟು ಕರಕಲಾಗಿರುವ ಘಟನೆ ಕಾಡುಬಿಸನಹಳ್ಳಿಯಲ್ಲಿ ನಡೆದಿದೆ. ಸಂಪತ್ ಕುಮಾರ್ ಎಂಬುವವರು ಮಾರುತಿ ಕಂಪೆನಿಯ ಹೊಸ ಕಾರನ್ನು ಖರೀದಿಸಿ ಮೂರು ತಿಂಗಳಾಗಿತ್ತು. ಮನೆ ಮುಂದೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ನೋಡುವಷ್ಟರಲ್ಲಿ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿ ಹೊತ್ತಿ ಉರಿದಿದೆ.
|
3 |
+
ಬೆಂಕಿಯನ್ನು ನಂದಿಸಲು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಗ್ನಿ ಅವಘಡದಿಂದ ಕಾರಿನಲ್ಲಿದ್ದ ಕೆಲವು ದಾಖಲೆಗಳು ಸೇರಿದಂತೆ ಪಾರ್ಕಿಂಗ್ನಲ್ಲಿದ್ದ ವಾಷಿಂಗ್ ಮೆಷಿನ್, ಬಟ್ಟೆಗಳು, ಮನೆಯ ಕಿಟಕಿ, ಬಾಗಿಲು ಹಾಗೂ ಮೇಲ್ಛಾವಣಿ ಬೆಂಕಿಯಿಂದ ಸುಟ್ಟು ಹಾನಿಯಾಗಿದ್ದು, ಸುಮಾರು 17 ಲಕ್ಷ ರೂ.ಗಳಷ್ಟು ನಷ್ಟವಾಗಿದೆ.
|
4 |
+
ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ : ಸಿದ್ದರಾಮಯ್ಯ
|
5 |
+
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ಕಾರು ಕಂಪೆನಿಯವರು ಸೂಕ್ತ ಪರಿಹಾರ ನೀಡಬೇಕೆಂದು ಕಾರಿನ ಮಾಲೀಕರು ಒತ್ತಾಯಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಅಗ್ನಿಯನ್ನು ನಂದಿಸಲಾಗಿದ್ದು, ಅನಾಹುತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
|
eesanje/url_46_230_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಎಡವಟ್ಟು
|
2 |
+
ಬೆಂಗಳೂರು, ಫೆ.21- ಸರ್ಕಾರ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಲೇ ಇದೆ. `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬಾ’ ಎಂಬ ಶೀರ್ಷಿಕೆಯನ್ನು ಬದಲಾವಣೆ ಮಾಡಿ ಕೈ ಸುಟ್ಟುಕೊಂಡ ಬೆನ್ನಲ್ಲೇ ಈಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶ ನೀಡುವ ಮೂಲಕ ಮತ್ತೊಂದು ಎಡವಟ್ಟು ಮಾಡಿ ನಗೆಪಾಟಲಿಗೀಡಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬೇಕು. ಖಾಸಗಿ ಶಾಲೆಗಳಲ್ಲಿ ಕಡ್ಡಾಯವಿಲ್ಲ ಎಂಬ ಆದೇಶವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ನೀಡುವ ಮೂಲಕ ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ.
|
3 |
+
ಈ ಆದೇಶ ಹೊರ ಬೀಳುತ್ತಿದ್ದಂತೆ ಮಾಧ್ಯಮಗಳು ಸರ್ಕಾರದ ಮೇಲೆ ಮುಗಿ ಬಿದ್ದಿವೆ. ನಾಡಗೀತೆ ಹಾಡುವುದಕ್ಕೂ ಶಾಲೆಗಳನ್ನು ಸರ್ಕಾರಿ, ಖಾಸಗಿ ಎಂದು ವಿಂಗಡಿಸಬೇಕೇ? ಇದು ಯಾವ ನಿಯಮವೆಂದು ಪ್ರಶ್ನಿಸುತ್ತಿದ್ದಂತೆ ವಿಧಾನಸೌಧದಲ್ಲಿದ್ದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಡಬಡಾಯಿಸುತ್ತ ಸ್ಪಷ್ಟನೆ ನೀಡಿದ್ದಾರೆ.
|
4 |
+
ಬಿಹಾರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು
|
5 |
+
ನಮಗೆ ಎಲ್ಲಾ ಶಾಲೆಗಳು ಒಂದೇ. ಪ್ರಿಂಟಿಂಗ್ ಮಿಸ್ಟೇಕ್ ಆಗಿದೆ. ಅದನ್ನು ಸರಿಪಡಿಸುತ್ತೇವೆ ಎಂದು ಸಮಜಾಯಿಷಿ ನೀಡಿದ್ದಾರೆ. ನಾವು ಆ ರೀತಿಯ ಯಾವುದೇ ಕಾನೂನು ಮಾಡಿಲ್ಲ. ಆ ರೀತಿಯ ಸುತ್ತೋಲೆ ಬಂದಿದ್ದರೆ ತಕ್ಷಣವೇ ಅದನ್ನು ಸರಿಪಡಿಸುತ್ತೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
|
6 |
+
ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಮಾಡಿ, ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿರುವ ಈ ಆದೇಶ ವ್ಯಾಪಕ ಚರ್ಚೆಗೊಳಗಾಗುವುದರೊಳಗೆ ಎಚ್ಚೆತ್ತ ಸರ್ಕಾರ ಸರಿಪಡಿಸಿಕೊಳ್ಳಲು ಮುಂದಾಯಿತು. ಇದೇ ರೀತಿ ಹಲವು ಎಡವಟ್ಟುಗಳನ್ನು ಮಾಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
|
eesanje/url_46_230_4.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳ ಪ್ರಯೋಗಕ್ಕೆ ಬಿಜೆಪಿ ಬ್ರೇಕ್
|
2 |
+
ಬೆಂಗಳೂರು, ಫೆ.21- ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಉಳಿದಿದ್ದು, ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವ ಇರಾದೆಯಲ್ಲಿ ಬಿಜೆಪಿ ಇದೆ. ಆದರೆ, ಹಲವು ಕ್ಷೇತ್ರಗಳಲ್ಲಿ ಕಮಲ ಪಡೆಗೆ ಅಭ್ಯರ್ಥಿಗಳ ಸಮಸ್ಯೆ ಎದುರಾಗಿದೆ. 10 ರಿಂದ 12 ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಕೊಕ್ ನೀಡಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿ ಸುವ ಚಿಂತನೆಯನ್ನು ಬಿಜೆಪಿ ಮಾಡಿತ್ತು. ಆದರೆ, ಆಂತರಿಕ ಭಿನ್ನಾಭಿಪ್ರಾಯ ಹಾಗೂ ಸಮರ್ಥ ಅಭ್ಯರ್ಥಿಗಳು ದೊರೆಯದಿರುವುದು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.
|
3 |
+
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಗ್ಗೆ ಶನಿವಾರ ಮತ್ತು ಭಾನುವಾರ ದಿಲ್ಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ಘಟಕವು ಸುಮಾರು 10 ರಿಂದ 12 ಕ್ಷೇತ್ರಗಳಲ್ಲಿ ಎದುರಾಗಿರುವ ಸವಾಲುಗಳ ಬಗ್ಗೆ ಪಕ್ಷದ ಹೈಕಮಾಂಡ್ಗೆ ವಿವರಿಸಿದ್ದು, ರಾಜ್ಯದ ವಾಸ್ತವ ಅಂಶಗಳನ್ನು ದಿಲ್ಲಿ ನಾಯಕರ ಮುಂದೆ ತೆರೆದಿಟ್ಟಿದ್ದಾರೆ.
|
4 |
+
ದಾವಣಗೆರೆ, ಬೀದರ್, ದಕ್ಷಿಣಕನ್ನಡ, ಬೆಂಗಳೂರು ಉತ್ತರದಂತಹ ಕ್ಷೇತ್ರಗಳ ಬಗ್ಗೆ ಕೇಂದ್ರದ ನಾಯಕರಿಗೆ ತಿಳಿಸಲಾಗಿದ್ದು, ಅವರ ನಿರ್ಧಾರಕ್ಕೆ ಎದುರು ನೋಡುತ್ತಿದ್ದೇವೆ ಎಂದು ಬಿಜೆಪಿಯ ನಾಯಕರೊಬ್ಬರು ತಿಳಿಸಿದ್ದಾರೆ. ಇನ್ನು, ಪಕ್ಷದ ಬೂತ್ ಮಟ್ಟದೊಂದಿಗೆ ಹಾಗೂ ಮತದಾರರೊಂದಿಗೆ ಸಂಪರ್ಕ ಕಳೆದುಕೊಂಡಿರುವ ಹಾಲಿ ಸಂಸದರನ್ನು ಬದಲಿಸಲು ಬಿಜೆಪಿ ಹೈಕಮಾಂಡ್ ಇಂಗಿತ ವ್ಯಕ್ತಪಡಿಸಿದೆ. ಆದರೆ, ಬಹಳಷ್ಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಲ್ಲ ಎನ್ನಲಾಗಿದೆ. ಕೆಲವೊಂದು ಕ್ಷೇತ್ರಗಳಲ್ಲಿ ಮಾತ್ರ ಬದಲಾವಣೆ ಆಗುವ ಸಾಧ್ಯತೆ ಇದೆ. ಹಲವು ಸವಾಲುಗಳು ಇರುವುದರಿಂದ ಚುನಾವಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಳೆದು ತೂಗಿ ಅಭ್ಯರ್ಥಿಗಳನ್ನು ಘೋಷಿಸಬಹುದು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.
|
5 |
+
ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನ
|
6 |
+
ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಚರ್ಚಿಸಲು ಫೆಬ್ರವರಿ ಅಂತ್ಯದಲ್ಲಿ ರಾಜ್ಯ ನಾಯಕರ ಸಭೆ ಕರೆಯಲಾಗಿದ್ದು, ಅಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ಚಿತ್ರಣ ಸಿಗುವ ಸಾಧ್ಯತೆಯಿದೆ. ಅಲ್ಲಿ ಸಿದ್ಧಗೊಂಡ ಪಟ್ಟಿಯನ್ನು ಅಂತಿಮ ಅಭ್ಯರ್ಥಿಗಳ ಪಟ್ಟಿ ಘೋಷಣೆಯ ನಿರೀಕ್ಷೆಯೊಂದಿಗೆ ಹೈಕಮಾಂಡ್ಗೆ ರವಾನಿಸಲಾಗುತ್ತದೆ. ಹೈಕಮಾಂಡ್ ನಾಯಕರು ಕೊನೆ ಕ್ಷಣದ ಬದಲಾವಣೆ ಮಾಡದಿದ್ದರೆ, ರಾಜ್ಯದ ನಾಯಕರೇ ಕಳುಹಿಸಿದ ಪಟ್ಟಿ ಅಂತಿಮವಾಗಲಿದೆ. ಮಾರ್ಚ್ ಎರಡನೇ ವಾರದಲ್ಲಿ ಅಭ್ಯರ್ಥಿಗಳ ಘೋಷಣೆಯಾಗುವ ಸಾಧ್ಯತೆ ಇದೆ.
|
7 |
+
ಜೊತೆಗೆ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪದವೀಧರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಗೆ ಆದ್ಯತೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೈಕಮಾಂಡ್ಗೆ ಸಲ್ಲಿಸಲಿದ್ದಾರೆ.
|
8 |
+
ಯಾವ್ಯಾವ ಕ್ಷೇತ್ರಗಳಲ್ಲಿ ಸವಾಲು? :ಪ್ರಮುಖವಾಗಿ ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ವಿಜಯಪುರ, ತುಮಕೂರು, ಕೊಪ್ಪಳ, ದಾವಣಗೆರೆ, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಕ್ಷೇತ್ರಗಳಲ್ಲಿ ಬಿಜೆಪಿಗೆ ಸಮಸ್ಯೆ ಎದುರಾಗಿದೆ. ಹಲವು ಕ್ಷೇತ್ರಗಳಲ್ಲಿ ಹಾಲಿ ಸಂಸದರು ತಾವೇ ನಿವೃತ್ತಿ ಘೋಷಿಸಿದ್ದು, ಅವರ ಜಾಗಕ್ಕೆ ಸಮರ್ಥ ಅಭ್ಯರ್ಥಿ ಬಿಜೆಪಿಗೆ ಸಿಗುತ್ತಿಲ್ಲ. ಒಂದಿಷ್ಟು ಕಡೆ ಆಂತರಿಕ ಭಿನ್ನಾಭಿಪ್ರಾಯಗಳು ಕೂಡ ಕಂಡುಬಂದಿದ್ದು, ಅಭ್ಯರ್ಥಿಗಳ ಘೋಷಣೆಯಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ.
|
eesanje/url_46_230_5.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ : ಸಿದ್ದರಾಮಯ್ಯ
|
2 |
+
ಬೆಂಗಳೂರು,ಫೆ.21-ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದರು. ವಿಧಾನ ಪರಿಷತ್ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು. ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ¾ಕೋ ಆಪರೇಟಿವ್ ಫೆಡರಿಲಿಸಂ ಎಂದು ಹೇಳುತ್ತಾರೆ. ಆದರೆ ಅವರ ಮತ್ತು ಕೇಂದ್ರ ಸರ್ಕಾರದ ನಡವಳಿಕೆಯಲ್ಲಿ ಇದು ಕಾಣುತ್ತಿಲ್ಲ ಎನ್ನುತ್ತಾ ಕೇಂದ್ರದಿಂದ ರಾಜ್ಯಕ್ಕೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.
|
3 |
+
ರಾಜ್ಯದಿಂದ ತೆರಿಗೆ ಕೇಂದ್ರಕ್ಕೆ ಹೋಗುತ್ತದೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತಿದೆ. ತೆರಿಗೆ ಹಂಚಿಕೆಯಲ್ಲಿ 2023-24ಕ್ಕೆ 37252 ಕೋಟಿ ರೂ. ಬರುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಂದ 13005 ಕೋಟಿ , ಒಟ್ಟು 50257 ಕೋಟಿ ಮಾತ್ರ ರೂ. ಬರುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ಪಾಲು ಕೂಡ ನಿಯಮಬದ್ದವಾಗಿ ಹೆಚ್ಚಾಗಬೇಕು. ಆದರೆ, ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋದಂತೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲು, ಕನ್ನಡಿಗರ ಹಕ್ಕಿನ ತೆರಿಗೆ ಮತ್ತು ಅನುದಾನದ ಪಾಲು ಕಡಿಮೆ ಆಗುತ್ತಿದೆ. ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ರಾಜ್ಯ ಬಲಿಷ್ಠವಾದರೆ, ಕೇಂದ್ರ ಬಲಿಷ್ಠವಾಗುತ್ತದೆ ಎಂದರು.
|
4 |
+
ಬಿಹಾರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು
|
5 |
+
ರಾಜ್ಯಕ್ಕೆ ಮತ್ತು ರಾಜ್ಯದ ಜನತೆಯ ಪಾಲಿಗೆ ಆಗುತ್ತಿರುವ ಅನ್ಯಾಯವನ್ನು ನಾವು ಪ್ರಶ್ನಿಸಿದರೆ, ಪ್ರಧಾನಿ ಮೋದಿ ಅವರು ದೇಶ ವಿಭಜನೆಯ ಮಾತಾಡುತ್ತೇವೆ ಎಂದು ಹೇಳಿದರು. ಪ್ರಧಾನಿ ಅವರ ಮಾತನ್ನು ಪ್ರಸ್ತಾಪಿಸಿದ ಬಳಿಕ ಬಿಜೆಪಿ ಸದಸ್ಯರು ಜೋರು ಧ್ವನಿಯಲ್ಲಿ ಪ್ರಧಾನಿ ಅವರು ಹಾಗೆ ಹೇಳಿಯೇ ಇಲ್ಲ ಎಂದರು.
|
6 |
+
ಇದಕ್ಕೆ ಕಾಂಗ್ರೆಸ್ ಸದಸ್ಯರಾದ ಪ್ರಕಾಶ್ ರಾಥೋಡ್, ಪ್ರಧಾನಿ ಮೋದಿಯವರಂತೂ ಸುಳ್ಳು ಹೇಳುವುದು ಮೂಮೂಲು. ಬಿಜೆಪಿ ಸದಸ್ಯರೂ ಸುಳ್ಳು ಹೇಳುವುದನ್ನು ಮುಂದುವರೆಸಿದ್ದಾರೆ ಎಂದು ವ್ಯಂಗ್ಯವಾಡಿದರು.
|
eesanje/url_46_230_6.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು : ಸಿಎಂ
|
2 |
+
ಬೆಂಗಳೂರು,ಫೆ.21- ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕುಟುಕಿದರು.
|
3 |
+
ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯವಾದಿ ಹೋರಾಟ ಮತ್ತು ಚಳವಳಿಯ ಚರಿತ್ರೆಯನ್ನು ಎಳೆ ಎಳೆಯಾಗಿ ವಿವರಿಸಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಸೇರಿದವರು, ಹುತಾತ್ಮರಾದವರು, ಬ್ರಿಟಿಷರಿಂದ ಹಿಂಸೆ ಅನುಭವಿಸಿದವರು ಕಾಂಗ್ರೆಸ್ಸಿನವರು. ಬಿಜೆಪಿ ಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆಯೇ ಇಲ್ಲ. ಅವರು ದೇಶಕ್ಕಾಗಿ ಹೋರಾಡಿದ ಚರಿತ್ರೆಯೇ ಇಲ್ಲ. ನಮ್ಮ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಈಗ ಇವರು ರಾಷ್ಟ್ರೀಯವಾದಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಭಾರತದ ಇತಿಹಾಸದಲ್ಲಿ ಯಾರು ನಿಜವಾದ ರಾಷ್ಟ್ರೀಯವಾದಿಗಳು ಎನ್ನುವುದು ದಾಖಲಾಗಿದೆ ಎಂದರು.
|
4 |
+
ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನ
|
5 |
+
ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಕಾಂಗ್ರೆಸ್ ನ ದಾಖಲೆ, ಸಾಧನೆಗಳನ್ನು ಮುಖ್ಯಮಂತ್ರಿಗಳು ಪರಿಷತ್ ನಲ್ಲಿ ವಿವರವಾಗಿ ಹೇಳುವಾಗ ಜೆಡಿಎಸ್ ನ ಸದಸ್ಯ ಭೋಜೇಗೌಡರು ಮಧ್ಯ ಪ್ರವೇಶಿಸಿ ಏನನ್ನೋ ಹೇಳಲು ಮುಂದಾದರು. ಈ ವೇಳೆ ಮುಖ್ಯಮಂತ್ರಿಗಳು ತಮ್ಮ ಮಾಮೂಲು ಹಾಸ್ಯದ ಶೈಲಿಯಲ್ಲಿ ಭೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ ಎಂದರು.ಮುಖ್ಯಮಂತ್ರಿಗಳ ಮಾತನ್ನು ಗೌರವದಿಂದ ಸ್ವೀಕರಿಸಿದ ಭೋಜೇಗೌಡರು ಸಿಎಂ ಗೆ ಕೈ ಮುಗಿದು ಕುಳಿತರು.
|
6 |
+
ದಾಖಲೆ ಮುರಿಯಲು ಸಾಧ್ಯವಿಲ್ಲ:ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಭರ್ಜರಿಯಾಗಿ ಜಯಗಳಿಸಿದ ಪುಟ್ಟಣ್ಣ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. 5ನೇ ಬಾರಿಗೆ ಪುಟ್ಟಣ್ಣ ಪರಿಷತ್ ಪ್ರವೇಶಿಸಿದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಸಭಾಪತಿಗಳೇ ನೀವು ಎಂಟು ಬಾರಿ ಗೆಲುವು ಸಾಧಿಸಿದ್ದೀರಿ, ನಿಮ್ಮ ದಾಖಲೆಯನ್ನು ಸದ್ಯಕ್ಕೆ ಯಾರೂ ಸರಿಗಟ್ಟಲು ಸಾಧ್ಯವಿಲ್ಲ ಎಂದು ಹೊರಟ್ಟಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.
|
eesanje/url_46_230_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಐಜೂರು ಪಿಎಸ್ಐ ಅಮಾನತು, ತನಿಖೆಗೆ ಆದೇಶ : ಗೃಹ ಸಚಿವ ಪರಮೇಶ್ವರ
|
2 |
+
ಬೆಂಗಳೂರು, ಫೆ. 21- ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ವಿಧಾನಸಭೆಗೆ ತಿಳಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ನಿನ್ನೆ ನಾವು ಪ್ರಸ್ತಾಪಿಸಿದ ವಕೀಲರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು. ಆಗ ಸಭಾಧ್ಯಕ್ಷ ಯು.ಟಿ.ಖಾದರ್, ಗೃಹಸಚಿವರಿಗೆ ಹೇಳಿಕೆ ನೀಡಲು ಅವಕಾಶ ಮಾಡಿಕೊಟ್ಟರು.
|
3 |
+
ರಾಮನಗರದಲ್ಲಿ ವಕೀಲರು ಪ್ರತಿಭಟನೆ ಮಾಡಿದ ವಿಚಾರವನ್ನು ನಿನ್ನೆ ಪ್ರತಿಪಕ್ಷಗಳ ಶಾಸಕರು ಸದನದಲ್ಲಿ ಪ್ರಸ್ತಾಪಿಸಿದರು. ನಿನ್ನೆ ರಾಮನಗರದ ಘಟನೆಗೆ ಸಂಬಂಧಿಸಿದಂತೆ ನೀಡಿದ ಉತ್ತರ ಪ್ರತಿಪಕ್ಷಗಳಿಗೆ ಸಮಾಧಾನ ತಂದಿರಲಿಲ್ಲ. ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡುವ ಬೇಡಿಕೆ ಇಟ್ಟಿದ್ದರು ಪರಮೇಶ್ವರ್ ತಿಳಿಸಿದರು.
|
4 |
+
ಐಜೂರು ಪೊಲೀಸ್ ಠಾಣೆಯ ಪಿಎಸ್ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡುತ್ತಿದ್ದೇವೆ. ವಕೀಲರ ಪ್ರತಿಭಟನೆಗೆ ಕಾರಣರಾದ ಚಾಂದ್ಪಾಷ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಡಿವೈಎಸ್ಪಿ ನೇತೃತ್ವದಲ್ಲಿ ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಗೊಂಡಿದೆ. ಪಿಎಸ್ಐ ಅಮಾನತ್ತು ಮಾಡಿರುವುದರಿಂದ ತನಿಖೆಗೂ ಅನುಕೂಲವಾಗಲಿದೆ. ರಾಮಗನರದಲ್ಲಿ ಈ ಹಿಂದೆ ಕೂಡ ಇಂತಹ ಘಟನೆಗಳು ಆಗಿದ್ದವು ಎಂದು ಅವರು ತಿಳಿಸಿದರು.
|
5 |
+
ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನ
|
6 |
+
ಈ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲು ವಕೀಲರು ನಿರ್ಧಾರ ಮಾಡಿದ್ದರು. ಈ ಎಲ್ಲಾ ಹಿನ್ನೆಲೆಯಲ್ಲಿ ನಾವು ಈ ಕ್ರಮ ಕೈಗೊಂಡಿದ್ದೇವೆ ಎಂದರು. ಆರ್.ಅಶೋಕ್ ಮಾತನಾಡಿ, ಈ ಅಧಿವೇಶನದಲ್ಲಿ ಮೊದಲ ಬಾರಿಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಸಂಧಾನಸಭೆ ನಡೆಸಿ ಯಶಸ್ವಿಯಾಗಿ ಸಂಧಾನ ಮಾಡಿರುವುದಕ್ಕೆ ಸಭಾಧ್ಯಕ್ಷರನ್ನು ಅಭಿನಂದಿಸುವುದಾಗಿ ಹೇಳಿದರು.
|
7 |
+
ರಾಮನಗರದ ಹಿಡಿತವನ್ನು ಮೀರಿ ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂಬ ನಮ್ಮ ಬೇಡಿಕೆಯಂತೆ ಗೃಹಸಚಿವರು ಕ್ರಮ ಕೈಗೊಂಡಿದ್ದಾರೆ. ಅದಕ್ಕಾಗಿ ಗೃಹ ಸಚಿವರನ್ನು ಅಭಿನಂದಿಸುವುದಾಗಿ ಹೇಳಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಎಂದರು. ವಕೀಲರು ಬೆಂಗಳೂರಿಗೆ ಬಂದು ಪ್ರತಿಭಟನೆ ಮಾಡುವುದರಿಂದ ಬೇರೆ ಬೇರೆ ರೀತಿಯ ಸಮಸ್ಯೆಗಳಾಗುತ್ತಿದ್ದವು. ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿದ್ದು, ಈ ಉತ್ತರ ಸಮಾಧಾನ ತಂದಿದೆ ಎಂದು ಹೇಳಿದರು.
|
8 |
+
ರಾಮನಗರದ ಜಿಲ್ಲಾ ವಕೀಲರ ಸಂಘದ 40 ವಕೀಲರ ಮೇಲೆ ಎ���್ಐಆರ್ ದಾಖಲಿಸಿರುವ ಪೊಲೀಸರ ಕ್ರಮ ಖಂಡಿಸಿ ರಾಮನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವಿಷಯವನ್ನು ನಿನ್ನೆ ಸದನದಲ್ಲಿ ಪ್ರತಿಪಕ್ಷಗಳ ಶಾಸಕರು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ್ದರು. ವಕೀಲರ ಮೇಲೆ ಪ್ರಕರಣ ದಾಖಲಿಸಿದ ಐಜೂರು ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ಅಮಾನತು ಮಾಡಬೇಕು, ವಕೀಲ ಚಾಂದ್ ಪಾಷಾನನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಯಲ್ಲಿ ಧರಣಿ ನಡೆಸಿದರು. ಈ ವೇಳೆ ಆಡಳಿತ ಬಿಜೆಪಿ ಸದಸ್ಯರ ಮಧ್ಯೆ ವಾಗ್ವಾದವೂ ನಡೆದಿತ್ತು.
|
9 |
+
ಬಿಹಾರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು
|
10 |
+
ಸದನ ಮುಂದೂಡಿದ ಸಭಾಧ್ಯಕ್ಷರು, ಆಡಳಿತ ವಿರೋಧ ಪಕ್ಷದ ಸದಸ್ಯರನ್ನು ತಮ್ಮ ಕೊಠಡಿಗೆ ಕರೆಸಿ ಸಂಧಾನ ನಡೆಸಿದರು. ಮತ್ತೆ ಕಲಾಪ ಆರಂಭವಾದಾಗ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೊಮ್ಮೆ ಉತ್ತರ ನೀಡುವುದಾಗಿ ಗೃಹಸಚಿವರು ಭರವಸೆ ನೀಡಿದ್ದರಿಂದ ಧರಣಿ ಕೈಬಿಡಲಾಗಿತ್ತು.
|
eesanje/url_46_230_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬೆಟ್ಟಿಂಗ್ ಹಣಕ್ಕಾಗಿ ಕಳ್ಳತನ ಮಾಡುತ್ತಿದ್ದವನ ಬಂಧನ
|
2 |
+
ಬೆಂಗಳೂರು,ಫೆ.20-ಮನೆಗಳ ಬೀಗ ಮುರಿದು ಕಳ್ಳತನ ಮಾಡಿದ ಚಿನ್ನದ ಒಡವೆಗಳನ್ನು ಮಾರಾಟ ಮಾಡಿ ಬಂದ ಹಣದಿಂದ ದುಶ್ಚಟಗಳಿಗೆ ಹಾಗೂ ಆನ್ಲೈನ್ ಬೆಟ್ಟಿಂಗ್ಗೆ ಉಪಯೋಗಿಸುತ್ತಿದ್ದ ಆರೋಪಿಯನ್ನು ಮೈಕೋಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
|
3 |
+
ಬಿಟಿಎಂ ಲೇಔಟ್ ನಿವಾಸಿ, ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಸುನೀಲ (31) ಬಂಧಿತ ಆರೋಪಿ. ಈತ ಮೈಕೋ ಲೇಔಟ್ ಮತ್ತು ಬಿಟಿಎಂ ಲೇಔಟ್ ಪ್ರದೇಶಗಳಲ್ಲಿ ಸುತ್ತಾಡುತ್ತಾ ಯಾವ ಮನೆಯಲ್ಲಿ ದಂಪತಿ ಕೆಲಸಕ್ಕೆ ಹೋಗುತ್ತಾರೆಂದು ತಿಳಿದುಕೊಂಡು ಅಂತಹ ಮನೆಗಳಲ್ಲಿ ಹಗಲು ವೇಳೆಯೇ ಕಳ್ಳತನ ಮಾಡುತ್ತಿದ್ದುದು ವಿಚಾರಣೆಯಿಂದ ತಿಳಿದುಬಂದಿದೆ.
|
4 |
+
ಆರೋಪಿಯಿಂದ 30.15 ಲಕ್ಷ ಮೌಲ್ಯದ 525 ಗ್ರಾಂ ತೂಕದ ಚಿನ್ನದ ಒಡವೆಗಳು, 550 ಗ್ರಾಂ ಬೆಳ್ಳಿಯ ಆಭರಣಗಳು ಹಾಗೂ 2 ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಿಂದ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 11 ಮನೆ ಕಳವು ಪ್ರಕರಣಗಳು ಪತ್ತೆಯಾಗಿವೆ.
|
5 |
+
ಅಡ್ಜೆಸ್ಟ್ಮೆಂಟ್ ಗಿರಾಕಿಗಳಿಂದಾ ಪಕ್ಷಕ್ಕೆ ಸೋಲಾಗಿದೆ : ಯತ್ನಾಳ್
|
6 |
+
ಈ ಕಾರ್ಯಾಚರಣೆಯನ್ನು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಿ.ಕೆ.ಬಾಬಾರವರ ಮಾರ್ಗ ದರ್ಶನದಲ್ಲಿ ಮತ್ತು ಮೈಕೋ ಲೇಔಟ್ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಮನೋಜ್ನೇತೃತ್ವದಲ್ಲಿ , ಇನ್ಸ್ಪೆಕ್ಟರ್ ಗಿರೀಶ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ಕೈಗೊಂಡಿದ್ದರು.
|
eesanje/url_46_230_9.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಗ್ಯಾರೆಂಟಿಗಳಿಂದ ರಾಜ್ಯದ ಜನತೆ ಖುಷಿಯಾಗಿದ್ದಾರೆ : ಸಿದ್ದರಾಮಯ್ಯ
|
2 |
+
ಬೆಂಗಳೂರು,ಫೆ.20- ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಅದಕ್ಕೆ ಬೇಕಾದ ಹಣವನ್ನು ಒದಗಿಸಿ ಸಂಪೂರ್ಣ ಜಾರಿ ಮಾಡಿದ್ದೇವೆ. ಇದರಿಂದ ರಾಜ್ಯದ ಜನರು ಖುಷಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಲವಾಗಿ ಸಮರ್ಥಿಸಿಕೊಂಡರು. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ವಿರೋಧಪಕ್ಷಗಳನ್ನು ಸಮಾಧಾನಪಡಿಸುವುದು ಹೇಗೆ, ಕಾಮಾಲೆ ಕಣ್ಣಿನವರಿಗೆ ಎಲ್ಲವೂ ಹಳದಿಯಾಗಿಯೇ ಕಾಣುತ್ತದೆ ಎಂದರು.
|
3 |
+
ರಾಜ್ಯಸರ್ಕಾರದ ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯ ಎಂದು ಟೀಕಿಸುತ್ತಾರೆ. ಎಲ್ಲ ಜಾತಿ, ಎಲ್ಲ ಧರ್ಮದ ಬಡವರಿಗೆ ಪ್ರಯೋಜನ ದೊರೆಯುತ್ತಿದೆ. ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವೋದಯ ಸರ್ವರಲ್ಲೂ ಇರಬೇಕು. ಆದರೆ ಸಬ್ ಕ ಸಾಥ್, ಸಬ್ ಕ ವಿಕಾಸ್, ಸಬ್ ಕ ವಿಶ್ವಾಸ್ ಎಂದು ಹೇಳಿದರು. ಹೇಳುವುದು ಒಂದು, ಮಾಡುವುದು ಇನ್ನೊಂದು ಎಂದು ಕೇಂದ್ರ ಸರ್ಕಾರದ ವಿರುದ್ಧ ಟೀಕಿಸಿದರು.
|
4 |
+
ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರವನ್ನು ಗಾಳಿಯಿಲ್ಲದೆ ಕೆಟ್ಟು ನಿಂತಿರುವ ಬಸ್ಗೆ ಹೋಲಿಸಿದ್ದಾರೆ. ಆದರೆ 2019 ರಿಂದ 2023 ರ ನಡುವಿನ ಅವರ ಸರ್ಕಾರ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸಾಗಿತ್ತು. ಮುಂದಕ್ಕೆ ಹೋಗಲಿಲ್ಲ. ಆ ಬಸ್ಸು ಮುಂದೆ ಹೋದರೆ ವಿಷದ ಹೊಗೆ ಉಗುಳುತ್ತದೆ ಎಂದು ಜನರ ಪಕ್ಕಕ್ಕೆ ತಳ್ಳಿದರು ಎಂದು ಲೇವಡಿ ಮಾಡಿದರು.
|
5 |
+
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೀವು 158 ಭರವಸೆಗಳನ್ನು ಈಡೇರಿಸಿದ್ದರೆ ಜನರು ಏಕೆ 2018 ರಲ್ಲಿ ನಿಮ್ಮನ್ನು ಪಕ್ಕಕ್ಕೆ ತಳ್ಳಿದರು? ಭರವಸೆಗಳ ಈಡೇರಿಕೆ ಕೇವಲ ಕಾಗದದ ಮೇಲಿತ್ತು ಎಂದು ತಿರುಗೇಟು ನೀಡಿದರು. ಉತ್ತರ ಮುಂದುವರೆಸಿದ ಸಿದ್ದರಾಮಯ್ಯ, ರಾಜ್ಯಸರ್ಕಾರ ಜಾರಿಗೆ ತಂದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಡಿ 160 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಫೆ.13 ರವರೆಗೆ 2,208 ಕೋಟಿ ಖರ್ಚಾಗಿದೆ. ಇದು ಸುಳ್ಳೆ ಎಂದು ಪ್ರಶ್ನಿಸಿದರು.
|
6 |
+
ಆಗ ಆರ್.ಅಶೋಕ್ರವರು, ಜೆಸಿಬಿಯಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಿರುವುದು ಸುಳ್ಳೆ ಎಂದು ಮರುಪ್ರಶ್ನಿಸಿದರು.ಬಸ್ ಸಿಗದೆ ವಿದ್ಯಾರ್ಥಿಗಳು ಹೋಗಿರುವುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಶಕ್ತಿ ಯೋಜನೆಯಡಿ ಪ್ರಯಾಣಿಸಿರು ವುದನ್ನು ಒಪ್ಪಿಕೊಳ್ಳುವುದಕ್ಕೆ ಸಿದ್ದರಿಲ್ಲವಲ್ಲ ಎಂದು ತಿರುಗೇಟು ನೀಡಿದರು. 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಫೆ. 13ರವರೆಗೆ 5,168 ಕೋಟಿಯನ್ನು ಇಂಧನ ಇಲಾಖೆಗೆ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯಲ್ಲಿ 1.60 ಕೋಟಿ ಕುಟುಂಬಗಳಿಗೆ ಇದರ ಪ್ರಯೋಜನ ದೊರೆತಿದೆ ಎಂದರು.
|
7 |
+
ಸಿಎಂ ಉತ್ತರಕ್ಕೆ ಅತೃಪ್ತಿ : ಬಿಜೆಪಿ – ಜೆ��ಿಎಸ್ ಸಭಾತ್ಯಾಗ
|
8 |
+
ಅನ್ನಭಾಗ್ಯದಡಿ 5 ಕೆಜಿ ಅಕ್ಕಿಯನ್ನು ನೀಡಿ ಹಸಿವು ಮುಕ್ತ ರಾಜ್ಯ ಮಾಡುವುದು ಗುರಿಯಾಗಿತ್ತು. ಅಕ್ಕಿ ಸಿಗದ ಕಾರಣಕ್ಕೆ ಪ್ರತಿ ಫಲಾನುಭವಿಗೆ ಮಾಸಿಕ 170 ರೂ. ನೀಡುತ್ತಿದ್ದೇವೆ. 4 ಕೋಟಿ 38 ಲಕ್ಷ ಜನರಿಗೆ ಈ ಹಣ ನೀಡಿದ್ದೇವೆ ಎಂದು ಹೇಳಿದರು. ಫೆ.13 ರವರೆಗೆ 8,554 ಕೋಟಿ ರೂ. ಗಳನ್ನು ಇದಕ್ಕಾಗಿ ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ರೂ.ನಂತೆ ನೀಡಲಾಗುತ್ತಿದ್ದು, 1.18 ಕೋಟಿ ಮಹಿಳೆಯರಿಗೆ ಪ್ರಯೋಜನವಾಗಿದೆ.
|
9 |
+
ಫೆ.13 ರವರೆಗೆ 13,352 ಕೋಟಿ ರೂ. ನೀಡಲಾಗಿದೆ. 2022-23ನೇ ಸಾಲಿನಲ್ಲಿ ಪದವಿ ತೇರ್ಗಡೆಯಾದ ನಿರುದ್ಯೋಗಿಗೆ ಮಾಸಿಕ 3 ಸಾವಿರ ರೂ. , ಡಿಪೆÇ್ಲಮಾ ತೇರ್ಗಡೆಯಾದವರಿಗೆ 1,500 ರೂ. ನೀಡಲಾಗುತ್ತಿದ್ದು, 7 ಕೋಟಿ ರೂ. 34 ಲಕ್ಷ ಯುವಕರಿಗೆ ಹಣ ವರ್ಗಾವಣೆಯಾಗಿದೆ. ಯಾವುದೇ ಮಧ್ಯವರ್ತಿಗಳಿಲ್ಲ. ಈ ವರ್ಷ ಗ್ಯಾರಂಟಿ ಯೋಜನೆಗಾಗಿ 39,675 ಕೋಟಿ ರೂ. ಒದಗಿಸಲಾಗಿದೆ ಎಂದು ಹೇಳಿದರು.
|
10 |
+
ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಸರ್ಕಾರವಿದ್ದರೆ ಅದು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಎಂದು ಸಮರ್ಥಿಸಿಕೊಂಡರು. ಹಾಲು ಉತ್ಪಾದನೆ ಕಡಿಮೆಯಾಗಿದೆ ಎಂದು ಅಶೋಕ್ರವರು ಹೇಳಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಹಾಲಿನ ಪ್ರಮಾಣ ಹೆಚ್ಚಳವಾಗಿದೆ ಎಂದು ಅಂಕಿಅಂಶಗಳ ಸಹಿತ ವಿವರಿಸಿದ ಅವರು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ 5 ರೂ. ಪ್ರೋತ್ಸಾಹ ಧನ ನೀಡಲು 9 ತಿಂಗಳ ಅವಗೆ 1,772 ಕೋಟಿ ರೂ. ಒದಗಿಸಲಾಗಿತ್ತು. 971 ಕೋಟಿ ರೂ. ಈತನಕ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
|
eesanje/url_46_231_1.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚು ಬೀಸಿದ ಪತಿ
|
2 |
+
ಬೆಂಗಳೂರು,ಫೆ.20- ಪತಿಯನ್ನು ತೊರೆದು ಪಿಜಿಯಲ್ಲಿದ್ದ ಪತ್ನಿಯ ನಡೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜೆಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ನಡೆದಿದೆ. ಪತಿ ಯಿಂದ ಹಲ್ಲೆಗೊಳಗಾದ ನಿಗರ್ (28) ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
|
3 |
+
ವಾಹನ ಚಾಲಕ ವೃತ್ತಿ ಮಾಡುತ್ತಿದ್ದ ಶೇಖ್ ಮುಜೀಬ್ (37) ಆರು ವರ್ಷದ ಹಿಂದೆ ನಿಗರ್ ಅವರನ್ನು ಮದುವೆಯಾಗಿದ್ದನು. ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ. ಪತ್ನಿ ಮೇಲೆ ಪತಿ ಅಕ್ರಮ ಸಂಬಂಧ ಶಂಕೆ ವ್ಯಕ್ತಪಡಿಸಿ ಜಗಳವಾಡುತ್ತಿದ್ದನು. 6 ತಿಂಗಳ ಹಿಂದೆ ಪತಿಯಿಂದ ಬೇರೆಯಾಗಿ ಮುರುಗೇಶ್ ಪಾಳ್ಯದ ಪಿಜಿಯಲ್ಲಿ ನಿಗಾರ್ ವಾಸವಾಗಿದ್ದಳು. ನಿನ್ನೆ ಸಂಜೆ ವಾಯು ವಿಹಾರಕ್ಕೆ ಹೋಗಿದ್ದ ನಿಗರ್ ಬರುವುದನ್ನೇ ಕಾಯುತ್ತಾ ಪತಿ ಮುಜೀಬ್ ನಿಂತಿದ್ದನು.
|
4 |
+
ಅಡ್ಜೆಸ್ಟ್ಮೆಂಟ್ ಗಿರಾಕಿಗಳಿಂದಾ ಪಕ್ಷಕ್ಕೆ ಸೋಲಾಗಿದೆ : ಯತ್ನಾಳ್
|
5 |
+
ವಾಯುವಿಹಾರ ಮುಗಿಸಿ ಸಂಜೆ 6.45ರ ಸುಮಾರಿನಲ್ಲಿ ಪಿಜಿ ಬಳಿ ಬರುತ್ತಿದ್ದಂತೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಏಕಾಏಕಿ ದಾಳಿ ಮಾಡಿ ಕೈ, ತಲೆ ಹಾಗೂ ದೇಹದ 25ಕ್ಕೂ ಹೆಚ್ಚು ಕಡೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿಗರ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಜೆಬಿ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ಆರೋಪಿ ಶೇಖ್ ಮುಜಾಬ್ನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
|
eesanje/url_46_231_10.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ನಕಲಿ ಡಾಕ್ಟರೇಟ್ ಪಡೆದವರ ವಿರುದ್ಧ ಕ್ರಮ
|
2 |
+
ಬೆಂಗಳೂರು,ಫೆ.19- ವಿಶ್ವವಿದ್ಯಾನಿಲಯಗಳಿಂದ ನೀಡುವ ನಕಲಿ ಗೌರವ ಡಾಕ್ಟರೇಟ್ ಪದವಿಗಳನ್ನು ಪಡೆಯುವುದರ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಪಕವಾಗಿ ನಕಲಿ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ.
|
3 |
+
ಇದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು. ನಕಲಿ ಗೌರವ ಡಾಕ್ಟರೇಟ್ ಕೊಡುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರ ಎಂದು ಮಂಜುನಾಥ್ ಕೇಳಿದ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಾಕ್ಟರೇಟ್ ಪದವಿ ಪಡೆದವರು ಡಾಕ್ಟರ್ ಎಂದು ಹಾಕೊಳ್ಳಬಹುದಾ ಎಂಬುದರ ಬಗ್ಗೆ ಸುಪ್ರಿಂಕೋರ್ಟ್ ತೀರ್ಪು ಬರಲಿದೆ. ಉನ್ನತ ಶಿಕ್ಷಣ ಪರಿಷತ್ ಸಭೆ ಕರೆದು, ನಕಲಿ ಗೌರವ ಡಾಕ್ಟರೇಟ್ ಪಡೆಯವ ಪ್ರಕರಣಗಳಿಗೆ ಕಡಿವಾಣ ಹಾಕುತ್ತೇವೆ ಎಂದು ಆಶ್ವಾಸನೆ ನೀಡಿದರು.
|
4 |
+
ವಸತಿ ಶಾಲೆ ಕುವೆಂಪು ಘೋಷ ವಾಕ್ಯ ಬದಲಾವಣೆ ಕುರಿತು ಸದನದಲ್ಲಿ ವಾಕ್ಸಮರ
|
5 |
+
ಜೊತೆಗೆ ಖಾಸಗಿ ವಿಶ್ವವಿದ್ಯಾನಿಲಯಗಳ ಮುಖ್ಯಸ್ಥರ ಕರೆದು ಚರ್ಚೆ ಮಾಡುತ್ತೇವೆ. ಇಂತಹ ಪ್ರಕರಣಗಳು ಮರುಕಳಿಸಂತೆ ಸರ್ಕಾರ ಸೂಕ್ತ ಕ್ರಮ ಜರುಗಿಸಲಿದೆ ಎಂದು ಆಶ್ವಾಸನೆ ನೀಡಿದರು.
|
eesanje/url_46_231_11.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
49 ಹೊಸ ತಾಲ್ಲೂಕುಗಳಿಗೆ 2-3 ವರ್ಷಗಳಲ್ಲಿ ಆಡಳಿತ ಕಚೇರಿ ನಿರ್ಮಾಣ
|
2 |
+
ಬೆಂಗಳೂರು,ಫೆ.19- ರಾಜ್ಯದ 49 ಹೊಸ ತಾಲೂಕುಗಳಿಗೆ 2-3 ವರ್ಷದಲ್ಲಿ ಆಡಳಿತ ಕಚೇರಿ ನಿರ್ಮಿಸಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಸಭೆಗೆ ಭರವಸೆ ನೀಡಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಯು.ಬಿ.ಬಣಕರ್ ಪರವಾಗಿ ಶಾಸಕ ಪ್ರಕಾಶ ಕೋಳೀವಾಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 63 ಹೊಸ ತಾಲೂಕುಗಳು ಮಂಜೂರಾಗಿವೆ. ಆದರೆ 14 ತಾಲೂಕುಗಳಿಗೆ ಮಾತ್ರ ಆಡಳಿತ ಕಚೇರಿ ಮಂಜೂರಾಗಿದೆ. ಉಳಿದ 49 ಹೊಸ ತಾಲೂಕುಗಳಿಗೆ ಹಿಂದಿನ ಸರ್ಕಾರದಲ್ಲಿ ಆಡಳಿತ ಕಚೇರಿ ಮಂಜೂರಾಗಿಲ್ಲ ಎಂದರು.
|
3 |
+
ರಾಜ್ಯದಲ್ಲಿ ಹಳೆಯ ಕೆಲವು ತಾಲೂಕುಗಳಲ್ಲಿ ಆಡಳಿತ ತಾಲೂಕು ಕಚೇರಿ ಬೇಡಿಕೆಯಿದೆ. ಒಟ್ಟಾರೆ 80 ರಿಂದ 100 ತಾಲೂಕು ಆಡಳಿತ ಕಚೇರಿಗೆ ಬೇಡಿಕೆಯಿದೆ. ಅನುದಾನದ ಲಭ್ಯತೆ ಆಧಾರದ ಮೇಲೆ ಆಡಳಿತ ಕಚೇರಿಗಳನ್ನು ನಿರ್ಮಾಣ ಮಾಡಲಾಗುವುದು. ಆಡಳಿತ ಕಚೇರಿಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಗಲುವ ವೆಚ್ಚವನ್ನು ತಯಾರು ಮಾಡಲಾಗುತ್ತಿದೆ. ಒಂದು ಕಟ್ಟಡ ನಿರ್ಮಾಣಕ್ಕೆ ಮಾದರಿ ಅಂದಾಜು ವೆಚ್ಚ ಸಿದ್ದಪಡಿಸಲಾಗುವುದು. ಇಲ್ಲದಿದ್ದರೆ ಅಂದಾಜು ವೆಚ್ಚ ಪರಿಷ್ಕರಣೆಯಾಗಬೇಕಾಗುತ್ತದೆ. ಸದ್ಯಕ್ಕೆ 10 ಕೋಟಿ ರೂ. ಇದ್ದು, ಅದನ್ನು ವಾಸ್ತವಿಕ ಅಂದಾಜು ವೆಚ್ಚದ ಆಧಾರದ ಮೇಲೆ ಪರಿಷ್ಕರಣೆ ಮಾಡಲಾಗುತ್ತದೆ. ಈ ಸಂಬಂಧ ಲೋಕೋಪಯೋಗಿ ಮತ್ತು ಗೃಹಮಂಡಳಿಯ ಎಂಜಿನಯರ್ಗಳ ಜೊತೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಹೇಳಿದರು.
|
4 |
+
ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕುಡಿಯುವ ನೀರಿನ ಸಮಸ್ಯೆ
|
5 |
+
ಒಂದು ಸಾವಿರ ಗ್ರಾಮ ಆಡಳಿತಾಕಾರಿ ನೇಮಕ:ಇನ್ನೊಂದು ತಿಂಗಳಿನಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುವುದಾಗಿ ಶಾಸಕ ಕಿರಣ್ಕುಮಾರ್ ಕೋಡ್ಗಿ ಅವರ ಪ್ರಶ್ನೆಗೆ ಕಂದಾಯ ಸಚಿವರು ಉತ್ತರಿಸಿದರು.ಕಂದಾಯ ಇಲಾಖೆಯಿಂದ ನಿಯೋಜನೆ ಮೇಲೆ ಹೋಗಲು 2 ಸಾವಿರ ಹುದ್ದೆಗಳಿಗೆ ಬೇಡಿಕೆಯಿದೆ. ಆದರೆ ನಾನು ಅವಕಾಶ ಮಾಡಿಕೊಟ್ಟಿಲ್ಲ. ಕಣ್ತಪ್ಪಿಸಿ ಅಧಿಕಾರಿಗಳು ಕೆಲವೊಂದು ನಿಯೋಜನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.
|
6 |
+
ಕುಂದಾಪುರ ತಾಲೂಕು ಕಚೇರಿಯಲ್ಲಿ 19 ಹುದ್ದೆಗಳ ಸಿಬ್ಬಂದಿ ನಿಯೋಜನೆ ಮೇಲೆ ಬೇರೆಡೆ ಕೆಲಸ ಮಾಡುತ್ತಿದ್ದಾರೆ. ಹಿಂದೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ತೀರಾ ಅನಿವಾರ್ಯ ಎನಿಸಿದ ಐವರನ್ನು ಹೊರತುಪಡಿಸಿ ಉಳಿದ 14 ಮಂದಿ ಸಿಬ್ಬಂದಿಯ ನಿಯೋಜನೆಯನ್ನು ರದ್ದುಪಡಿಸಿ ಮೂಲ ಸ್ಥಾನಕ್ಕೆ ಮರಳುವಂತೆ ಸೂಚಿಸಲಾಗುವುದು. ಇದು ಕೇವಲ ಕುಂದಾಪುರಕ್ಕೆ ಸೀಮಿತವಾಗುವುದಿಲ್ಲ. ವ್ಯಕ್ತಿ ಹಿತಕ್ಕಿಂತ ಸಾರ್ವಜನಿಕರ ಹಿತ ಮುಖ್ಯ ಎಂದರು.
|
7 |
+
ವಸತಿ ಶಾಲೆ ಕುವೆಂಪು ಘೋಷ ವಾಕ್ಯ ಬದಲಾವಣೆ ಕುರಿತು ಸದನದಲ್ಲಿ ವಾಕ್ಸಮರ
|
8 |
+
ಕುಂದಾಪುರ ತಾಲೂಕು ಕಚೇರಿಯಲ್ಲಿ 110 ಹುದ್ದೆಗಳು ಮಂಜೂರಾಗಿದ್ದು, 70 ಹುದ್ದೆಗಳು ಭರ್ತಿಯಾಗಿವೆ. 36 ಹುದ್ದೆಗಳು ಖಾಲಿ ಇವೆ. ಭರ್ತಿಯಾದ ಹುದ್ದೆಗಳಲ್ಲಿ 19 ಜನರು ನಿಯೋಜನೆ ಮೇಲೆ ಬೇರೆಡೆ ಕೆಲಸ ಮಾಡುತ್ತಿರುವುದು ತಪ್ಪು. ಕಂದಾಯ ಇಲಾಖೆಯಲ್ಲಿ ಜನರ ಕೆಲಸಗಳು ಹೆಚ್ಚಾಗಿರುತ್ತವೆ. ಆದರೂ ಕಳೆದ ಸರ್ಕಾರದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ನಿಯೋಜನೆ ಮೇಲೆ ಬೇರೆಡೆಗೆ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು. ಕಂದಾಯ ಇಲಾಖೆಯ ಸಿಬ್ಬಂದಿಗೆ 2014 ರಿಂದ ಕಂದಾಯ ವಿಷಯಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಿಲ್ಲ. ಹೀಗಾಗಿ ಗ್ರಾಮ ಲೆಕ್ಕಿಗರಿಗೆ ನಿಯಮ ಗೊತ್ತಿಲ್ಲ. ಈ ಸಂಬಂಧ ಒಂದು ಯೋಜನೆ ರೂಪಿಸಿ ಸರ್ಕಾರದಿಂದ ತರಬೇತಿ ನೀಡಲಾಗುವುದು ಎಂದರು.
|
eesanje/url_46_231_12.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕುಡಿಯುವ ನೀರಿನ ಸಮಸ್ಯೆ
|
2 |
+
ಬೆಂಗಳೂರು,ಫೆ.19- ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿರುವ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ ಪೂರ್ವಭಾವಿ ಪ್ರಸ್ತಾಪ ಮಾಡುತ್ತಾ, ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಬೋರ್ವೆಲ್ಗಳಲ್ಲಿ ಬತ್ತಿಹೋಗಿವೆ. ಅಂತರ್ಜಲ ಕುಸಿದಿದೆ. ರಾಜ್ಯದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿದ ಸಮಸ್ಯೆ ತೀವ್ರವಾಗಿದೆ. ಜಲಕ್ಷಾಮ ಉಂಟಾಗಿದೆ. ಬೇಸಿಗೆಗೂ ಮುನ್ನವೇ ಇಂಥ ಗಂಭೀರ ಪರಿಸ್ಥಿತಿಯನ್ನು ರಾಜ್ಯ ಅನುಭವಿಸುತ್ತಿದೆ.
|
3 |
+
ಕಳೆದ 30 ವರ್ಷಗಳಿಗೆ ಹೋಲಿಸಿದರೆ ಗರಿಷ್ಠ ತಾಪಮಾನ 2 ಡಿಗ್ರಿಯಷ್ಟು ಹೆಚ್ಚಾಗಿದೆ ಎಂಬುದನ್ನು ತಜ್ಞರು ಹೇಳಿದ್ದಾರೆ. ಕೆಆರ್ಎಸ್, ಆಲಮಟ್ಟಿ ಭದ್ರ ಸೇರಿದಂತೆ ಎಲ್ಲಾ ಜಲಾಶಯಗಳಲ್ಲೂ ನೀರಿನ ಸಂಗ್ರಹ ಕಡಿಮೆಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅರ್ಧದಷ್ಟಿದೆ. ಇದು ಎಲ್ಲ ಕ್ಷೇತ್ರಗಳ ಶಾಸಕರ ಸಮಸ್ಯೆಯಾಗಿದೆ. ಸರ್ಕಾರ ತಕ್ಷಣ ಈ ವಿಚಾರದಲ್ಲಿ ಗಮನಹರಿಸಬೇಕು ಎಂದು ಒತ್ತಾಯಿಸಿದರು.
|
4 |
+
ಲಿಂಗಾಪುರ ಎಂಬ ಗ್ರಾಮದಲ್ಲಿ 1100 ಜನಸಂಖ್ಯೆ ಇದ್ದು 800 ಮಂದಿ ನೀರಿಲ್ಲದೆ ಗ್ರಾಮ ತೊರೆದು ಗುಳೇ ಹೋಗಿದ್ದಾರೆ. ಗೋವಾ, ಮಂಗಳೂರು ಕಡೆ ಉದ್ಯೋಗ ಹರಸಿ ಗುಳೇ ಹೋಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದರು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಹಣವಿದ್ದರೆ ಹೊಸ ಬೋರ್ವೆಲ್ ಕೊರೆಯಲು ಸಾಧ್ಯವಿಲ್ಲ. ಇರುವ ಬೋರ್ವೆಲ್ಗಳನ್ನು ಡ್ರಿಲ್ ಮಾಡಬಹುದು ಅಷ್ಟೇ ಇನ್ನು ಮುಂದಿನ ನಾಲ್ಕು ತಿಂಗಳು ಕಷ್ಟಕರವಾಗಿದೆ. ಒಂದು 500 ರೂ.ಗಿದ್ದ ಟ್ಯಾಂಕರ್ ನೀರು 3ರಿಂದ ನಾಲ್ಕು ಸಾವಿರ ರೂ.ಗೆ ಹೆಚ್ಚಳವಾಗಿದೆ. ಹೀಗಾಗಿ ಪ್ರತಿ ಗ್ರಾಮಪಂಚಾಯ್ತಿಯಲ್ಲೂ ಹೊಸ ಬೋರ್ವೆಲ್ ಕೊರೆಯಲು ಅನುಕೂಲವಾಗುವಂತೆ ಆದೇಶ ಮಾಡಬೇಕು. ಪ್ರತಿ ಗ್ರಾಮಪಂಚಾಯ್ತಿಗೆ 10 ಲಕ್ಷ ರೂ. ನೀಡಬೇಕೆಂದು ಆಗ್ರಹಿಸಿ ಹೆಚ್ಚಿನ ಚರ್ಚೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು.
|
5 |
+
ಸರ್ಕಾರ ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ : ಬೊಮ್ಮಾಯಿ
|
6 |
+
ಇದನ್ನು ಬೆಂಬಲಿಸಿದ ಬಿಜೆಪಿಯ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಇದೊಂದು ಗಂಭೀರವಾದ ವಿಚಾರ. ಜನಜಾನುವರುಗಳಿಗೆ ತೊಂದರೆಯಾಗಿದೆ. ಜೀವನದಿಗಳಾಗಿದ್ದ ತುಂಗಾ ಭದ್ರ ನದಿಗಳು ಭತ್ತಿ ಹೋಗಿದ್ದು, ಮಲೆನಾಡಿನಲ್ಲೂ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಳೇ ಹೋಗುವ ಪರಿಸ್ಥಿತಿ ಇದೆ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
|
7 |
+
ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಕುಡಿಯುವ ನೀರಿನ ವಿಚಾರದ ಚರ್ಚೆಗೆ ತಕರಾರಿಲ್ಲ. ಸಭಾಧ್ಯಕ್ಷರು ಯಾವ ರೂಪದಲ್ಲಿ ಚರ್ಚೆಗೂ ಕೊಟ್ಟರೂ ಸರ್ಕಾರ ಸಿದ್ದವಿದೆ ಎಂದರು. ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಈ ವಿಚಾರವನ್ನು ನಿಲುವಳಿ ಸೂಚನೆಗೆ ಬದಲಾಗಿ ನಿಯಮ 69ರಡಿ ಚರ���ಚೆಗೆ ಅವಕಾಶ ನೀಡುವುದಾಗಿ ಪ್ರಕಟಿಸಿದರು.
|
eesanje/url_46_231_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸಿಎಂ ಉತ್ತರಕ್ಕೆ ಅತೃಪ್ತಿ : ಬಿಜೆಪಿ – ಜೆಡಿಎಸ್ ಸಭಾತ್ಯಾಗ
|
2 |
+
ಬೆಂಗಳೂರು,ಫೆ.20- ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ತೃಪ್ತಿದಾಯಕವಾಗದೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿಂದು ಸಭಾತ್ಯಾಗ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳು ಸೇರಿದಂತೆ ರಾಜ್ಯಪಾಲರ ಭಾಷಣವನ್ನು ಬಲವಾಗಿ ಸಮರ್ಥಿಸಿಕೊಂಡು ಉತ್ತರ ನೀಡುತ್ತಿದ್ದರು. ಮುಖ್ಯಮಂತ್ರಿ ನೀಡುವ ಉತ್ತರ ಸಮಂಜಸವಾಗಿಲ್ಲ. ರಾಜ್ಯಪಾಲರ ಭಾಷಣಕ್ಕೆ ಪೂರಕವಾಗಿ ಉತ್ತರ ನೀಡುವ ಬದಲು ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕರು ಆರೋಪಿಸಿದರು.
|
3 |
+
ಕೆಲವು ಸ್ಪಷ್ಟನೆಗಳನ್ನು ಬಿಜೆಪಿ ಶಾಸಕರು ಕೇಳಿದಾಗ ಅದಕ್ಕೆ ಮುಖ್ಯಮಂತ್ರಿಯವರು ನೀಡಿದ ಉತ್ತರ ಪ್ರತಿಪಕ್ಷ ಸದಸ್ಯರನ್ನು ಸಮಾಧಾನಪಡಿಸಲಿಲ್ಲ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಬೆಳೆ ಪರಿಹಾರ ಧನ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು.
|
4 |
+
ತೆರಿಗೆ ತಾರತಮ್ಯದ ವಿರುದ್ಧ ಧ್ವನಿ ಎತ್ತದಿರುವುದು 7 ಕೋಟಿ ಕನ್ನಡಿಗರಿಗೆ ಮಾಡಿದ ಅನ್ಯಾಯ ; ಸಿಎಂ
|
5 |
+
ಕೇವಲ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಾ ಪ್ರತಿಪಕ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಉತ್ತರ ನೀಡುತ್ತಿರುವುದು ನಮಗೆ ತೃಪ್ತಿ ತಂದಿಲ್ಲ ಎಂದು ಹೇಳಿ ಸಭಾತ್ಯಾಗ ಮಾಡಿ ಹೊರನಡೆದರು. ಆಗ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಎಲ್ಲಾ ಸುಳ್ಳು ಎಂದು ಹೇಳಿ ಹೊರನಡೆದರು. ಬಳಿಕ ಜೆಡಿಎಸ್ ಶಾಸಕರೂ ಕೂಡ ಅವರನ್ನು ಹಿಂಬಾಲಿಸಿದರು.
|
6 |
+
ನಂತರ ಪ್ರತಿಪಕ್ಷಗಳ ವಿರುದ್ಧ ಖಾರವಾಗಿ ಮಾತನಾಡಿದ ಮುಖ್ಯಮಂತ್ರಿ, ಇವರಿಗೆ ನಾಚಿಕೆಯಾಗಬೇಕು. ಕೇಂದ್ರಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಕೇಂದ್ರದಿಂದ ಬರಪರಿಹಾರಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಂದು ರೂಪಾಯಿ ಹಣವನ್ನೂ ಬಿಡುಗಡೆ ಮಾಡಿಲ್ಲ. ನಾವು ಕೊಟ್ಟ ಮನವಿ ಪತ್ರಗಳಿಗೆ ಸಂಬಂಧಿಸಿದಂತೆ ಒಂದು ಸಭೆಯನ್ನೂ ಕೂಡ ನಡೆಸಿಲ್ಲ ಎಂದು ವಾಗ್ದಾಳಿ ನಡೆಸಿದರು.ರೈತರು, ಬಡವರು, ದಲಿತರು, ಕಾರ್ಮಿಕರು, ಅಲ್ಪಸಂಖ್ಯಾತರು, ಸಂವಿಧಾನ ವಿರೋಧಿ ಎಂದು ಆರೋಪಿಸಿದ ಅವರು, ನಾವು ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
|
7 |
+
ನಂತರ ರಾಜ್ಯಪಾಲರು ಉಭಯ ಸದನಗಳ ಸಭೆಯನ್ನುದ್ದೇಶಿಸಿ ಮಾಡಿದ ಭಾಷಣಕ್ಕೆ ಕೃತಜ್ಞತಾ ಪೂರಕ ವಂದನೆಗಳನ್ನು ಸಲ್ಲಿಸುವ ನಿರ್ಣಯವನ್ನು ಮುಖ್ಯಮಂತ್ರಿ ಮಂಡಿಸಿದರು. ಆಗ ಸಭಾಧ್ಯಕ್ಷ ಯು.ಟಿ.ಖಾದರ್ರವರು ಮತಕ್ಕೆ ಹಾಕಿದಾಗ ಧ್ವನಿ ಮತದ ಅಂಗೀಕಾರ ದೊರೆಯಿತು.
|
eesanje/url_46_231_3.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ರಾಜ್ಯಪಾಲರನ್ನು ಹಾಡಿ ಹೊಗಳಿದ ಸಿಎಂ ಸಿದ್ದು
|
2 |
+
ಬೆಂಗಳೂರು,ಫೆ.20- ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಡಿ ಹೊಗಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ಮುಖ್ಯಮಂತ್ರಿಯವರು ಕೇರಳ ಮತ್ತು ತಮಿಳುನಾಡಿನಲ್ಲಿ ಅಲ್ಲಿನ ರಾಜ್ಯಪಾಲರು ಸರ್ಕಾರದ ಭಾಷಣವನ್ನು ಓದದೇ ತಮ್ಮದೇ ಅಭಿಪ್ರಾಯವನ್ನು ಮಂಡಿಸಿದ್ದಾರೆ ಅಥವಾ ಭಾಷಣ ಮಾಡದೇ ಹೊರನಡೆದಿದ್ದಾರೆ. ನಮ್ಮ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಆ ರೀತಿ ಮಾಡಿಲ್ಲ. ಸರ್ಕಾರದ ನಿಲುವು, ನೀತಿ, ಮುನ್ನೋಟ ಕಾರ್ಯಕ್ರಮವನ್ನು ಸ್ಪಷ್ಟವಾಗಿ ಸದನದ ಮುಂದಿಟ್ಟಿದ್ದಾರೆ ಎಂದರು.
|
3 |
+
ಈ ಮೂಲಕ ರಾಜ್ಯಪಾಲರು ತಮ್ಮ ಸ್ಥಾನದ ಗೌರವವನ್ನು ಉಳಿಸಿಕೊಂಡಿರುವುದಲ್ಲದೆ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದರು. ಸರ್ಕಾರ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದೆ. ರಾಜ್ಯಪಾಲರ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಂದಾಗ ಬಸವರಾಜ ಬೊಮ್ಮಾಯಿ ಆರೋಪಿಸಿದರು.
|
4 |
+
ನೆಲದಡಿ ಕುಕ್ಕರ್ನಲ್ಲಿ ಅಡಗಿಸಿಟ್ಟಿದ 2 ಕೆಜಿ ಸ್ಪೋಟಕ ವಶ
|
5 |
+
ನಾವು ಯಾರ ಒಳ್ಳೆಯತನವನ್ನೂ ದುರುಪಯೋಗಪಡಿಸಿಕೊಳ್ಳುವುದಿಲ್ಲ. ನಿಮ್ಮ ಒಳ್ಳೆಯತನವನ್ನು ಈವರೆಗೂ ದುರುಪಯೋಗ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿಯವರು ಬಸವರಾಜ ಬೊಮ್ಮಾಯಿಯವರಿಗೆ ತಿರುಗೇಟು ನೀಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯಪಾಲರನ್ನು ಹೊಗಳಿದರೂ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ ಎಂದು ಲೇವಡಿ ಮಾಡಿದರು.
|
eesanje/url_46_231_4.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಅಡ್ಜೆಸ್ಟ್ಮೆಂಟ್ ಗಿರಾಕಿಗಳಿಂದಾ ಪಕ್ಷಕ್ಕೆ ಸೋಲಾಗಿದೆ : ಯತ್ನಾಳ್
|
2 |
+
ಬೆಂಗಳೂರು,ಫೆ.20- ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿರುವ ಅಡ್ಜೆಸ್ಟ್ಮೆಂಟ್ ಗಿರಾಕಿಗಳಿಂದಾಗಿ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸೋಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ನಡೆದ ಚರ್ಚೆಗೆ ಮುಖ್ಯಮಂತ್ರಿಯವರು ಉತ್ತರ ನೀಡುವಾಗ ಚುನಾವಣಾ ಫಲಿತಾಂಶಗಳ ಬಗ್ಗೆ ಚರ್ಚೆಯಾಯಿತು. ರಾಜ್ಯದ ಜನ ನಮಗೆ ಸ್ಪಷ್ಟ ಬಹುಮತ ಕೊಟ್ಟು ಆಯ್ಕೆ ಮಾಡಿದ್ದಾರೆ.
|
3 |
+
ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಬಿಜೆಪಿಯವರು ಪ್ರಧಾನಮಂತ್ರಿ ನರೇಂದ್ರಮೋದಿಯವರನ್ನು ರಾಜ್ಯಕ್ಕೆ ಕರೆತಂದು ಗೆಲ್ಲಿಸುತ್ತಿದ್ದರು. ಲೆಕ್ಕವಿಲ್ಲದಷ್ಟು ಸಭೆಗಳು, ರೋಡ್ ಶೋ ಮಾಡಿಸಿದರು. ಆದರೂ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದಾಗ, 2018 ರಲ್ಲಿ ನೀವು ಮುಖ್ಯಮಂತ್ರಿಯಾಗಿದ್ದಾಗಲೂ ಜನ ತಿರಸ್ಕಾರ ಮಾಡಿದರು. ಲೋಕಸಭೆಯಲ್ಲಿ ನಿಮಗೆ ವಿರೋಧಪಕ್ಷದ ಮಾನ್ಯತೆ ಗಳಿಸುವಷ್ಟು ಸ್ಥಾನಗಳು ಸಿಕ್ಕಿಲ್ಲ ಎಂದು ಆರ್.ಅಶೋಕ್ ಕಿಚಾಯಿಸಿದರು.
|
4 |
+
ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ
|
5 |
+
2018 ರ ಸೋಲನ್ನು ನಾವು ತಲೆಬಾಗಿ ಸ್ವೀಕರಿಸುತ್ತೇವೆ. ಈಗಿನ ಸೋಲನ್ನು ಒಪ್ಪಿಕೊಳ್ಳುವ ಉದಾರತೆಯನ್ನು ಬಿಜೆಪಿ ಪ್ರದರ್ಶಿಸಬೇಕು ಎಂದು ಸಿದ್ದರಾಮಯ್ಯ ತಿಳಿ ಹೇಳಿದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಬಸನಗೌಡ ಪಾಟೀಲ ಯತ್ನಾಳ್, ಬಸವರಾಜ ಬೊಮ್ಮಾಯಿ ಮಾಡಿದ ಕೆಲಸವನ್ನು ನಮ್ಮ ಪಕ್ಷದ ಬಿಜೆಪಿ ನಾಯಕರು ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹಾಳು ಮಾಡಿದರು. ಚುನಾವಣೆ ಸೋಲಿಗೆ ಬೊಮ್ಮಾಯಿ ಆಗಲೀ, ಮೋದಿಯಾಗಲೀ ಕಾರಣ ಅಲ್ಲ ಅಡ್ಜೆಸ್ಟ್ಮೆಂಟ್ ಗಿರಾಕಿಗಳು ಕಾರಣ ಎಂದು ಕಿಡಿಕಾರಿದರು.
|
6 |
+
ಹೊಂದಾಣಿಕೆ ಯಾರು ಮಾಡಿಕೊಂಡಿದ್ದಾರೆ ಎಂದು ಯತ್ನಾಳ್ ಹೆಸರು ಉಲ್ಲೇಖಿಸಬೇಕು. ಪ್ರತಿಬಾರಿಯೂ ಹೇಳಿದ್ದನ್ನೇ ಹೇಳಿ ಗೌಪ್ಯವಾಗಿಡಬಾರದು ಎಂದು ತರಾಟೆಗೆ ತೆಗೆದುಕೊಂಡಾಗ ಈಗಾಗಲೇ ನಾನು ಮಾಧ್ಯಮಗಳ ಮೂಲಕ ಘಂಟಾಘೋಷವಾಗಿ ಸತ್ಯ ಹೇಳಿದ್ದೇನೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ವಂಶ ವಾದ ಹಾಗೂ ಭ್ರಷ್ಟಾಚಾರದ ಆಡಳಿತವನ್ನು ಕಿತ್ತು ಹಾಕುತ್ತಾರೆ ಎಂದು ಹೇಳಿದರು.
|
eesanje/url_46_231_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ತೆರಿಗೆ ತಾರತಮ್ಯದ ವಿರುದ್ಧ ಧ್ವನಿ ಎತ್ತದಿರುವುದು 7 ಕೋಟಿ ಕನ್ನಡಿಗರಿಗೆ ಮಾಡಿದ ಅನ್ಯಾಯ ; ಸಿಎಂ
|
2 |
+
ಬೆಂಗಳೂರು,ಫೆ.20- ಕೇಂದ್ರದಿಂದಾಗುತ್ತಿರುವ ಆರ್ಥಿಕ ತಾರತಮ್ಯದ ವಿರುದ್ಧ ಧ್ವನಿ ಎತ್ತದೇ ಇರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡಿದ ಅನ್ಯಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿಂದು ಉತ್ತರ ನೀಡಿದ ಮುಖ್ಯಮಂತ್ರಿಯವರು, ತಮ್ಮ ಸರ್ಕಾರ ಆಡಳಿತಕ್ಕೆ ಬಂದು ಇಂದಿಗೆ 9 ತಿಂಗಳಾಗಿವೆ. ರಾಜ್ಯಪಾಲರು ಸರ್ಕಾರದ ನಿಲುವು, ಮುನ್ನೋಟ, ನೀತಿಯನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು.
|
3 |
+
ರಾಜ್ಯದಲ್ಲಿ ಬರಪರಿಸ್ಥಿತಿ ಇದೆ. ಪರಿಹಾರ ನೀಡಿ ಎಂದು ನಾನು ಖುದ್ದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ಷಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ರಾಜ್ಯಸರ್ಕಾರದಿಂದ 17 ಬಾರಿ ಪತ್ರ ಬರೆದಿದ್ದೇವೆ. ಒಂದು ಬಾರಿ ಮಾತ್ರ ಅಮಿತ್ ಷಾ ನಿಮ್ಮ ಪತ್ರ ತಲುಪಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಉಳಿದ 16 ಪತ್ರಗಳನ್ನು ಕಡೆಗಣಿಸಿದ್ದಾರೆ. ಇದನ್ನು ಒಕ್ಕೂಟ ವ್ಯವಸ್ಥೆ ಎಂದು ಕರೆಯಬೇಕೆ ಎಂದು ಪ್ರಶ್ನಿಸಿದರು.
|
4 |
+
ರಾಹುಲ್ ಸಲಹೆ ಮೇರೆಗೆ ಕೇರಳದ ಕುಟುಂಬಕ್ಕೆ ಕರ್ನಾಟಕ ಪರಿಹಾರ; ವಿಜಯೇಂದ್ರ ಖಂಡನೆ
|
5 |
+
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಐದು ಬಾರಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಪ್ರಮಾಣವನ್ನು 100 ರಿಂದ 150 ಕ್ಕೆ ಹೆಚ್ಚಿಸುವಂತೆ ಮನವಿ ಕೊಟ್ಟಿದ್ದಾರೆ. ಕಂದಾಯ ಸಚಿವರೂ ಹಲವು ಬಾರಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಆದರೆ ಯಾವುದಕ್ಕೂ ಕೇಂದ್ರ ಸ್ಪಂದಿಸಿಲ್ಲ. ಮೊದಲ ಬಾರಿಗೆ 2023 ರ ಅಕ್ಟೋಬರ್ 20 ರಂದು ಬರ ನಿರ್ವಹಣೆಗೆ ನೆರವು ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
|
6 |
+
ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ
|
7 |
+
4 ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ನವೆಂಬರ್ 16 ರಂದು ಎರಡನೇ ಬಾರಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಲೂ ಕೇಂದ್ರದಿಂದ ಉತ್ತರ ಇಲ್ಲ. ಈ ಅನ್ಯಾಯವನ್ನು ಬಿಜೆಪಿಯವರಂತೂ ಕೇಳುತ್ತಿಲ್ಲ. ನಾವೂ ಕೇಳಬಾರದೆ ಎಂದು ಪ್ರಶ್ನಿಸಿದರು. ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸರ್ಕಾರದಿಂದ ಸಂಘರ್ಷ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ. ಇಡೀ ಸದನ ಒಟ್ಟಾಗಿ ನ್ಯಾಯ ಕೇಳಬೇಕಿದೆ. ನಾವು ಯಾರ ಜೊತೆಯೂ ಸಂಘರ್ಷ ಮಾಡುತ್ತಿಲ್ಲ. ನಮಗೆ ದೊರೆಯಬೇಕಾದ ಪಾಲಿನ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.
|
eesanje/url_46_231_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ವಿಧಾನಸಭೆಯಲ್ಲಿ ಸುಳ್ಳು-ಸತ್ಯಗಳ ಸಂಘರ್ಷ
|
2 |
+
ಬೆಂಗಳೂರು,ಫೆ.20- ಆಡಳಿತ ಮತ್ತು ಪ್ರತಿಪಕ್ಷದ ನಡುವೆ ಸುಳ್ಳು ಮತ್ತು ಸತ್ಯದ ಜಂಜಾಟ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ರಾಜ್ಯಪಾಲರು ವಿಧಾಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಫೆ.12 ರಂದು ಮಾಡಿದ್ದ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಸುದೀರ್ಘ ಉತ್ತರ ನೀಡಿದರು.
|
3 |
+
ವಿಪಕ್ಷಗಳು ರಾಜ್ಯಪಾಲರ ಭಾಷಣ ಸುಳ್ಳು ಎಂದು ಆರೋಪಿಸಿವೆ. ಆದರೆ ಯಾವ ಹೇಳಿಕೆಗಳು ಸುಳ್ಳು ಎಂದು ಸ್ಪಷ್ಟವಾಗಿ ತಿಳಿಸಿಲ್ಲ. ಏನೋ ಹೇಳಿಕೆ ನೀಡಬೇಕು ಎಂದು ಟೀಕೆ ಮಾಡುತ್ತಿದ್ದಾರೆ. ವಿರೋಧಪಕ್ಷಗಳು ಸರ್ಕಾರವನ್ನು ಹೊಗಳಬೇಕು ಎಂದು ಬಯಸುವುದಿಲ್ಲ. ಆದರೆ ಆಧಾರರಹಿತವಾದ ಸುಳ್ಳು ಹೇಳುವುದು ಸರಿಯಲ್ಲ. ಬಿಜೆಪಿಯವರಿಗೆ ಸುಳ್ಳೇ ಮನೆದೇವರು. ಅವರಿಗೆ ಸತ್ಯ ಹೇಳುವುದು ಗೊತ್ತಿಲ್ಲ ಎಂದು ತಿರುಗೇಟು ನೀಡಿದರು. ಇದಕ್ಕೆ ವಿರೋಧಪಕ್ಷಗಳಿಂದ ಆರ್.ಅಶೋಕ್, ಬಸವರಾಜುಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರರು ತಿರುಗೇಟು ನೀಡಿ ರಾಜ್ಯಪಾಲರ ಭಾಷಣದಲ್ಲಿ ಎಲ್ಲವೂ ಸುಳ್ಳೇ ಆಗಿದೆ. ಸತ್ಯ ಯಾವುದು ಎಂದು ಹುಡುಕಬೇಕಾಗಿದೆ ಎಂದು ತಿರುಗೇಟು ನೀಡಿದರು.
|
4 |
+
ಇದಕ್ಕೆ ಪ್ರತ್ಯುತ್ತರಿಸಿದ ಮುಖ್ಯಮಂತ್ರಿಯವರು, ವಿರೋಧಪಕ್ಷಗಳು ಅದರಲ್ಲೂ ವಿಪಕ್ಷದ ನಾಯಕರು ಅಂಕಿ ಅಂಶಗಳ ಸಮೇತ ಮಾತನಾಡಬೇಕು. ಬಾಯಿಗೆ ಬಂದಂತೆ ಮಾತನಾಡಬಾರದು. ಬಸವರಾಜು ಬೊಮ್ಮಾಯಿಯವರು ಆ ರೀತಿ ಮಾತನಾಡಿಲ್ಲ. ಅವರು ಹೊರಗಡೆ ನಿಜ ಹೇಳುತ್ತಾರೆ. ಸದನದ ಒಳಗಡೆ ರಾಜಕೀಯಕ್ಕಾಗಿ ಟೀಕೆ ಮಾಡುತ್ತಾರೆ ಎಂದು ಕಿಚಾಯಿಸಿದರು.
|
5 |
+
ಅದಕ್ಕೆ ತಿರುಗೇಟು ನೀಡಿದ ಬಸವರಾಜು ಬೊಮ್ಮಾಯಿ, ನಾವು-ನೀವು ಜೊತೆಯಲ್ಲೇ ಇದ್ದವರು. ಹೀಗಾಗಿ ನೀವು ಏನು ಮಾಡುತ್ತೀರೋ ನಾವೂ ಅದನ್ನೇ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರನ್ನು ಥಳಕು ಹಾಕಿಕೊಳ್ಳಲು ಯತ್ನಿಸಿದರು. ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದ ಮುಖ್ಯಮಂತ್ರಿಯವರು, ಬಿಜೆಪಿಯವರು ಪ್ರತಿಬಾರಿಯೂ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಒಂದಂಶವನ್ನಾದರೂ ನೀವು ಸುಳ್ಳು ಎಂದು ತೋರಿಸಿ ಎಂದು ಸವಾಲು ಹಾಕಿದರು.
|
6 |
+
ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ
|
7 |
+
ಅದಕ್ಕೆ ಪ್ರತ್ಯುತ್ತರಿಸಿದ ಬೊಮ್ಮಾಯಿ, ಹಿಂದಿನ ಸರ್ಕಾರದ ಅವಯಲ್ಲಿ ಸಾರಿಗೆ ಸಂಸ್ಥೆಗಳಿಗೆ ಒಂದು ಬಸ್ಸನ್ನೂ ಖರೀದಿಸಲಿಲ್ಲ ಎಂದು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಇದು ಸುಳ್ಳು. ಬಿಎಂಟಿಸಿಗೆ 1311 ಬಸ್ಗಳನ್ನು ಕೆಎಸ್ಆರ್ಟಿಸಿಗೆ 70 ಕ್ಕೂ ಹೆಚ್ಚು ಬಸ್ಸುಗಳನ್ನು ಖರೀದಿಸಿ ನೀಡಲಾಗಿತ್ತು. ಪಂಚಖಾತ್ರಿಗಳ ಜೊತೆಗೆ ಶೇ.97 ರಷ್ಟು ಬಜೆಟ್ ಘೋಷಣೆಗೆ ಅಧಿಸೂಚನೆ ಹೊರಡಿಸಿದ್ದೇವೆ ಎಂದು ರಾಜ್ಯಪಾಲರ ಮೂಲಕ ತಿಳಿಸಿದ್ದಾರೆ.ಆದರೆ ಆರ್ಥಿಕ ಸಮೀಕ್ಷಾ ವರದಿಯಲ್ಲಿ ಶೇ.55 ರಷ್ಟು ಪ್ರಗತಿಯಾಗ���ಲ್ಲ ಎಂದು ಉಲ್ಲೇಖಿಸಲಾಗಿದೆ. ಹಾಲಿಗೆ ನೀಡುವ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಿಲ್ಲ ಎಂದು ಉಲ್ಲೇಖಿಸಿದರು.
|
8 |
+
ನಿಮ್ಮ ಎಲ್ಲಾ ಪ್ರಶ್ನೆಗೂ ಹಂತಹಂತವಾಗಿ ಉತ್ತರ ಕೊಡುತ್ತೇನೆ ಎಂದ ಮುಖ್ಯಮಂತ್ರಿಯವರು, ಗಲಾಟೆ ಮಾಡುವುದೇ ವಿರೋಧಪಕ್ಷಗಳ ಕೆಲಸವಾಗಬಾರದು, ಉತ್ತರ ಕೇಳಲು ಇಷ್ಟವಿಲ್ಲ ಎಂದರೆ ಸುಮ್ಮನೆ ಕುಳಿತುಕೊಳ್ಳಿ ಎಂದು ತಿರುಗೇಟು ನೀಡಿದರು. ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿಯವರ ಪ್ರತಿಯೊಂದು ಮಾತಿಗೂ ಅಡ್ಡಿಪಡಿಸುವ ಪ್ರಯತ್ನ ಮಾಡಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು.
|
eesanje/url_46_231_7.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಧಮ್ಕಿ, ಬೇಲಿ ಹಾಕುವ, ಸೆಟ್ಲಮೆಂಟ್ ಮಾಡುವ ಸಂಸ್ಕೃತಿ ನಮ್ಮದಲ್ಲ : ಕುಮಾರಸ್ವಾಮಿ
|
2 |
+
ಬೆಂಗಳೂರು,ಫೆ.20- ಧಮ್ಕಿ ಹಾಕುವ, ಸೆಟ್ಲಮೆಂಟ್ ಮಾಡುವ ಸಂಸ್ಕøತಿ ನಮ್ಮದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಮ್ಕಿ ಹಾಕಿ ಸಿಕ್ಕ ಸಿಕ್ಕ ಜಾಗದಲ್ಲಿ ಬೇಲಿ ಹಾಕುವುದು ನಮ್ಮ ಜಾಯಮಾನವಲ್ಲ. ನಾನು ಯಾರಿಗೂ ಧಮ್ಕಿ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.
|
3 |
+
ರಾಜ್ಯಸಭೆ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕುವಂತೆ ಕೇಳುವುದಾಗಿ ಹೇಳಿದ್ದೇವೆ. ಜೆಡಿಎಸ್ಗೆ 2 ಮತ ಬರಲಿದೆ ಎಂದು ಹೇಳಿರುವುದು ತಪ್ಪಲ್ಲವೇ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು. ಆನೆಯಿಂದ ಮೃತಪಟ್ಟ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ನೀಡುತ್ತಾರೆ. ನಮ್ಮ ರೈತರಿಗೆ 2 ಸಾವಿರ ರೂ. ಬರ ಪರಿಹಾರ ಕೊಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ನಾಯಕರು. ಅವರ ಸಲಹೆ ಮೇರೆಗೆ 15 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದಿಂದ ಪರಿಹಾರವೇ ಬಂದಿಲ್ಲ ಎಂದು ಹೇಳುತ್ತಾರೆ. ಕನ್ನಡಿಗರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಸಾವಿರ ಸಾರಿ ಸುಳ್ಳು ಹೇಳಿ ನಿಜ ಮಾಡಲು ಹೊರಟಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
|
4 |
+
ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟರೆ 15 ಲಕ್ಷ ರೂ. ಕೊಡುತ್ತಾರೆ. ಆದರೆ ರಾಜ್ಯದಲ್ಲಿ ಆನೆದಾಳಿಯಿಂದ ಮೃತಪಟ್ಟರೆ 5 ಲಕ್ಷ ರೂ. ಕೊಡುತ್ತಾರೆ. ಆ ಹಣಕ್ಕೂ ಕಚೇರಿಗಳಿಗೆ ಅಲೆದಾಡಬೇಕು. ಕನ್ನಡಿಗರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆಯವರು ಅನ್ಯಾಯದ ವಿರುದ್ಧ ಆಕ್ಷೇಪ ಮಾಡಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು. ಕೇಂದ್ರ ಸಮಿತಿ ನೀಡುವ ಶಿಫಾರಸ್ಸಿನಂತೆ ರಾಜ್ಯಗಳಿಗೆ ಹಣ ನೀಡಲಾಗುತ್ತದೆ. ರಾಷ್ಟ್ರದ ಹಲವು ಆರ್ಥಿಕ ತಜ್ಞರ ಜೊತೆ ಮುಕ್ತ ಚರ್ಚೆ ಮಾಡೋಣ ಎಂದು ಹೇಳಿದರು.
|
5 |
+
ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆ ಬಿಜೆಪಿ : ಬಘೇಲ್ ಆರೋಪ
|
6 |
+
ರಾಮನಗರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳನ್ನು ಸರ್ಕಾರ ತನ್ನ ಅವಶ್ಯಕತೆಗೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ರಾಮನಗರದಲ್ಲಿ ವಕೀಲರ ವಿರುದ್ಧ ಎಫ್ಐಆರ್ ಹಾಕಿದ್ದರು. ವಕೀಲರು ಒಂದು ವಾರದಿಂದ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಅವರಿಗೆ ಭರವಸೆ ನೀಡಬಹುದಿತ್ತು. ಆದರೆ ವಕೀಲರ ಪ್ರತಿಭಟನೆಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆಯ ವೈಫಲ್ಯದಿಂದ ಈ ಘಟನೆ ನಡೆದಿದೆ. ಕಾನೂನು ಹೋರಾಟ ಮಾಡುವುದಾಗಿ ಅವರಿಗೆ ಭರವಸೆ ನೀಡಿದ್ದೇನೆ ಎಂದರು.
|
eesanje/url_46_231_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಹುಲ್ ಸಲಹೆ ಮೇರೆಗೆ ಕೇರಳದ ಕುಟುಂಬಕ್ಕೆ ಕರ್ನಾಟಕ ಪರಿಹಾರ; ವಿಜಯೇಂದ್ರ ಖಂಡನೆ
|
2 |
+
ಬೆಂಗಳೂರು,ಫೆ.20- ಆನೆಯ ದಾಳಿಯಿಂದ ಕೇರಳದಲ್ಲಿ ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಮೇರೆಗೆ ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು, ರಾಹುಲ್ ಗಾಂಧಿಯವರ ವಯನಾಡ್ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
|
3 |
+
ಕರ್ನಾಟಕದಾದ್ಯಂತ ಬರಗಾಲ ಮತ್ತು ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯವರನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರುಗಳು ಹೊಣೆಹೊರಬೇಕು ಎಂದು ಹೇಳಿದ್ದಾರೆ.
|
4 |
+
ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆ ಬಿಜೆಪಿ : ಬಘೇಲ್ ಆರೋಪ
|
5 |
+
ರಾಜ್ಯ ಸರ್ಕಾರ ಪರಿಹಾರ ನೀಡಿದ್ದು ಎಷ್ಟು ಸರಿ? :ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೆ ಅರಣ್ಯ ಸಚಿವರು, ನಿಮ್ಮ (ರಾಹುಲ್ ಗಾಂಧಿ) ಸಲಹೆಯಂತೆ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದೇವೆ ಎಂದು ಪತ್ರ ಬರೆದಿದ್ದಾರೆ. ಜೊತೆಗೆ ಈ ಬಗ್ಗೆ ಬೀದರ್ನಲ್ಲಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಕೇರಳ ವ್ಯಕ್ತಿಯ ಕುಟುಂಬ ಪರಿಹಾರ ನೀಡಲಾಗಿದೆ ಎಂದಿದ್ದಾರೆ.
|
6 |
+
ಮಾನವೀಯ ನೆಲೆಯಲ್ಲಿ ಪಕ್ಷದ ವತಿಯಿಂದ ಪರಿಹಾರ ನೀಡಲಿ, ಆದರೆ ಕಾಡಾನೆಗಳಿಗೂ ರಾಜ್ಯದ ಗಡಿಗಳನ್ವಯ ವ್ಯವಹರಿಸಿ, ಯಾರದ್ದೆ ರಾಜಕೀಯ ಲಾಭಕ್ಕೆ ಸರ್ಕಾರ ಖಜಾನೆ ಹಣ ಬಳಸುವುದು, ಸದನ ನಡೆಯುತ್ತಿರುವಾಗ ಸಚಿವರು ಪಕ್ಷದ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದು, ಅದು ಕೂಡ ಹೊರ ರಾಜ್ಯದವರಿಗೆ ಈ ರೀತಿ ಪರಿಹಾರವನ್ನು ಕರ್ನಾಟಕ ಸರ್ಕಾರ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿರುವುದು ಪ್ರಕರಣಕ್ಕೆ ಬೇರೆ ಸ್ವರೂಪ ನೀಡಿದ್ದು ಈ ಹಿನ್ನಲೆಯಲ್ಲಿ ವಿಜಯೇಂದ್ರ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
|
eesanje/url_46_231_9.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ
|
2 |
+
ಬೆಂಗಳೂರು,ಫೆ.20- ಸಹಕಾರ ಸಂಘಗಳಲ್ಲಿ ಸರ್ಕಾರದ ಹಸ್ತಕ್ಷೇಪವು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡರು ಸರ್ಕಾರದ ನಡೆಯನ್ನು ಖಂಡಿಸಿದರು. ಬಜೆಟ್ ಅಧಿವೇಶನದಲ್ಲಿ ಸಹಕಾರ ಸಚಿವರು ಮಂಡಿಸಿದ 2024ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ಕಾಯಿದೆ ಅಡಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರವೇ ಶಾಸಕ ಲಕ್ಷ್ಮಣ ಸವದಿ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿರುವುದು ಸರಿಯಷ್ಟೆ.
|
3 |
+
ಈ ಸಮಿತಿಯಲ್ಲಿ ನಾನು ಸೇರಿದಂತೆ ಮಾಜಿ ಸಚಿವ ಎಸ್.ಆರ್. ಪಾಟೀಲ, ಶಾಸಕ ಅರೆಬೈಲ್ ಶಿವರಾಮ್ ಹೆಬ್ಬಾರ್, ಕೆ. ಷಡಾಕ್ಷರಿ, ವಿಧಾನ ಪರಿಷತ್ತಿನ ಸದಸ್ಯ ರಾಜೇಂದ್ರ ರಾಜಣ್ಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಹೆಚ್.ಎಸ್. ರಮಣರೆಡ್ಡಿ, ಅಪರ ನಿಬಂಧಕರು (ನಿವೃತ್ತ), ಹೆಚ್.ಎಸ್. ನಾಗರಾಜಯ್ಯ, ಅಪರ ನಿಬಂಧಕರು (ನಿವೃತ್ತ) ಇವರುಗಳು ಸದಸ್ಯರಾಗಿರುತ್ತಾರೆ.
|
4 |
+
ಈ ಸಮಿತಿಯು ಈಗಾಗಲೇ ಹಲವಾರು ಬಾರಿ ಸಭೆಯನ್ನು ನಡೆಸಿ, ತಿದ್ದುಪಡಿಗಳ ಕುರಿತು ಚರ್ಚಿಸಲಾಗಿರುತ್ತದೆ. ಆದರೆ, ಸಮಿತಿಯು ತನ್ನ ವರದಿಯನ್ನು ನೀಡಿರುವುದಿಲ್ಲ. ಪ್ರಸ್ತಾಪಿತ ತಿದ್ದುಪಡಿಗಳು ಸಮಿತಿಯ ಮುಂದೆ ಬಂದಿಲ್ಲದ್ದಿದ್ದರೂ ಸಹಕಾರ ದಿಗ್ಗಜರು, ಸಚಿವರುಗಳಾದ ಹೆಚ್.ಕೆ.ಪಾಟೀಲ್, ರಾಜಣ್ಣ ಹಾಗೂ ಶಿವಾನಂದ ಪಾಟೀಲ್ ನೀವುಗಳು ಮುಖ್ಯಮಂತ್ರಿಗಳ ಮಾತಿಗೆ ಕಟ್ಟುಬಿದ್ದು ಈ ವಿಧೇಯಕವನ್ನು ತರಾತುರಿಯಲ್ಲಿ ತರಲು ಮುಂದಾಗಿರುವುದರ ಹಿಂದೆ ಯಾರ ಪ್ರೇರೇಪಣೆ ಇದೆ ಎಂದು ತಿಳಿದಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು.
|
5 |
+
ಬಡತನ, ಹಸಿವು ನಿವಾರಿಸುವ ಯೋಜನೆಗೆ 1 ಮಿಲಿಯನ್ ಡಾಲರ್ ನೇರವು ನೀಡಿದ ಭಾರತ
|
6 |
+
ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ 7,000 ಕೋಟಿ ರೂ. ಠೇವಣಿ, ಬೆಳಗಾವಿ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ 5,000 ಕೋಟಿ ರೂ., ಬಾಗಲಕೋಟೆ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ 3,000 ಕೋಟಿ ರೂ.ಗಳಷ್ಟು ಠೇವಣಿ ಇದೆ. ಇದೇ ರೀತಿ ಇತರೆ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕುಗಳಲ್ಲಿ ಕೋಟ್ಯಾಂತರ ರೂ.ಗಳು ಠೇವಣಿ ಇದೆ. ಇಂತಹ ಬ್ಯಾಂಕುಗಳಿಗೆ ಕೇವಲ 10.00 ಲಕ್ಷ ರೂ. ಷೇರು ಬಂಡವಾಳ ನೀಡಿ, ಮೂವರನ್ನು (03) ಸರ್ಕಾರದ ನಾಮನಿರ್ದೇಶನ ಮಾಡಿ, ಸರ್ಕಾರದ ಹಿಡಿತದಲ್ಲಿಟ್ಟುಕೊಂಡು ಸ್ವಾಯತ್ತ ಸಂಸ್ಥೆಗಳನ್ನು ಸರ್ಕಾರದ ಸಂಸ್ಥೆಗಳನ್ನಾಗಿ ಮಾಡಿಕೊಳ್ಳುವುದು ಸರಿಯೇ ಎಂದು ಪ್ರಶ್ನಿಸಿದರು.
|
7 |
+
ಎಐಎಂಐಎಂ ಪಕ್ಷದ ವಾರಿಸ್ ಪಠಾಣ್ ಬಂಧನ
|
8 |
+
ಗ್ರಾಮ ಪಂಚಾಯಿತಿ ಸೇರಿದಂತೆ ಪೌರ ಸಂಸ್ಥೆಗಳು ಸರ್ಕಾರದ ಅನುದಾನದಿಂದ ಕಾರ್ಯನಿರ್ವಹಿಸುತ್ತಿವೆ. ಅಲ್ಲಿನ ನೌಕರರು ಸರ್ಕಾರಿ ನೌಕರರಾಗಿರುತ್ತಾರೆ. ಆದರೆ, ಸಹಕಾರ ಸಂಸ್ಥೆಗಳು ಸದಸ್ಯರ ಬಂಡವಾಳದಿಂದ ಕಾರ್ಯ ನಿರ್ವಹಿಸುತ್ತಿದ್ದು, ಇಲ್ಲಿನ ನೌಕರರು, ಸರ್ಕಾರಿ ನೌಕರರು ಆಗಿರುವುದಿಲ್ಲ ಎಂಬ ಅಂಶವನ್ನು ವ್ಯಕ್ತಪಡಿಸಿದ ಅವರು ಸಹಕಾರ ಸಂಸ್ಥೆಗಳನ್ನು ಪೌರ ಸಂಸ್ಥೆಗಳಿಗೆ ಹೋಲಿಕೆ ಮಾಡದೇ, ತಿದ್ದುಪಡಿ ವಿಧೇಯಕವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
|
eesanje/url_46_232_1.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವಸತಿ ಶಾಲೆ ಕುವೆಂಪು ಘೋಷ ವಾಕ್ಯ ಬದಲಾವಣೆ ಕುರಿತು ಸದನದಲ್ಲಿ ವಾಕ್ಸಮರ
|
2 |
+
ಬೆಂಗಳೂರು,ಫೆ.19- ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಹಾಕುವ ಘೋಷವಾಕ್ಯ ಬದಲಾವಣೆ ವಿಧಾನದ ಮಂಡಲದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿಗೆ ಎಡೆ ಮಾಡಿಕೊಟ್ಟಿತು. ಈ ಮೊದಲು ವಸತಿ ಶಾಲೆಗಳಲ್ಲಿ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ರಾಷ್ಟ್ರೀಯ ಕವಿ ಕುವೆಂಪು ಅವರ ಘೋಷವಾಕ್ಯವನ್ನು ಬದಲಾಯಿಸಿ ಸಮಾಜ ಕಲ್ಯಾಣ ಇಲಾಖೆ ಹೊಸದಾಗಿ ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬ ನಾಮಫಲಕ ಹಾಕಲು ಹೊರಡಿಸಿದ ಸುತ್ತೋಲೆ ವಿವಾದವನ್ನು ಸೃಷ್ಟಿಸಿತು.
|
3 |
+
ವಿಧಾನಸಭೆಯ ಶೂನ್ಯವೇಳೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಷಯ ಪ್ರಸ್ತಾಪಿಸಿ ರಾಷ್ಟ್ರಕವಿ ಕುವೆಂಪು ಅವರ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬ ಘೋಷವಾಖ್ಯವನ್ನು ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಬದಲಿಸಿ ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಹಾಕಲು ಉದ್ದೇಶಿಸಲಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. ಇತ್ತ ವಿಧಾನಪರಿಷತ್ನಲ್ಲೂ ಶೂನ್ಯವೇಳೆಯಲ್ಲೂ ಇದೇ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರ ಸೂಕ್ತ ಉತ್ತರ ಕೊಡಬೇಕೆಂದು ಪಟ್ಟು ಹಿಡಿದಿದ್ದರಿಂದ ಸದನವನ್ನು ಕೆಲ ಕಾಲ ಮುಂದೂಡಲಾಯಿತು.
|
4 |
+
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿಜಯೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಈ ಬಗ್ಗೆ ತೀರ್ಮಾನಿಸಿದ್ದಾರೆ ಎಂಬ ವಿಚಾರ ವಾಟ್ಸಪ್ಗಳಲ್ಲಿ ಹರಿದಾಡುತ್ತಿದೆ. ಇದು ಕುವೆಂಪು ಅವರಿಗೆ ಮಾಡಿದ ಅಪಮಾನ. ಈ ಹಿಂದೆ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂಬ ಸುತ್ತೋಲೆ ಹೊರಡಿಸಿ ವಾಪಸ್ ಪಡೆದಿರುವ ಉಲ್ಲೇಖವಿದೆ. ಇದೊಂದು ಗಂಭೀರ ವಿಚಾರ. ಚರ್ಚೆಯಾಗಬೇಕು ಎಂದು ಆಗ್ರಹಿಸಿದರು.
|
5 |
+
ಆಗ ಬಿಜೆಪಿಯ ಹಿರಿಯ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಎದ್ದು ನಿಂತು ಮಾತನಾಡಲು ಮುಂದಾದರು. ಆ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ವಾಸ್ತವಾಂಶದ ಆಧಾರದ ಮೇಲೆ ಉತ್ತರ ಕೊಡುತ್ತೇವೆ.ಹೆಚ್ಚಿಗೆ ಮಾತನಾಡುವುದಾದರೆ ನಾವೂ ಮಾತನಾಡಬಹುದು ಎಂದಾಗ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಲು ಮುಂದಾದರು. ಆಗ ಏರಿದ ಧ್ವನಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಮಾತನಾಡಲು ಮುಂದಾದಾಗ ವಾಗ್ವಾದ ನಡೆದು ಗೊಂದಲ ಉಂಟಾಯಿತು.
|
6 |
+
ಒಂದು ಹಂತದಲ್ಲಿ ಕೃಷ್ಣಭೈರೇಗೌಡರು ಒಂದು ಹಂತದಲ್ಲಿ ಕುವೆಂಪು ಅವರ ವಿಚಾರವನ್ನು ಪಠ್ಯದಿಂದ ಕಿತ್ತು ಹಾಕಿದವರು ನೀವು ಎಂದು ತಿರುಗೇಟು ನೀಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರು ಕೂಡ ಕೃಷ್ಣಭೈರೇಗೌಡರ ಮಾತಿಗೆ ಬೆಂಬಲ ನೀಡಲು ಮುಂದಾದರು. ಮಧ್ಯಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ವಿಚಾರದಲ್ಲಿ ಸರ್ಕಾರದ ನೀತ��� ಇರಬೇಕು. ಒಬ್ಬ ಪ್ರಧಾನ ಕಾರ್ಯದರ್ಶಿ ಈ ರೀತಿ ಮಾಡಿರುವುದು ಸರಿಯಲ್ಲ. ವಿಧಾನಸೌಧದ ಮುಂಭಾಗದಲ್ಲಿ ಸರ್ಕಾರಿ ಕೆಲಸ ದೇವರ ಕೆಲಸ ಎಂಬ ವಾಕ್ಯವಿದೆ. ಇದನ್ನೂ ಬದಲು ಮಾಡುತ್ತೀರಾ? ಒಬ್ಬ ಅಧಿಕಾರಿ ಈ ರೀತಿ ಆದೇಶ ಹೊರಡಿಸಲು ಅಧಿಕಾರ ಕೊಟ್ಟವರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು.
|
7 |
+
ಬಿಜೆಪಿಯ ಹಿರಿಯ ಸದಸ್ಯ ಆರಗ ಜ್ಞಾನೇಂದ್ರ ಮಾತನಾಡಿ, ಈ ಸರ್ಕಾರದಲ್ಲಿ ಲಂಗುಲಗಾಮು ಯಾವುದೂ ಇಲ್ಲ ಎಂದು ಛೇಡಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಈ ವಿಚಾರದ ಬಗ್ಗೆ ನಾಳೆ ಸಮಾಜ ಕಲ್ಯಾಣ ಸಚಿವರು ಉತ್ತರ ಕೊಡುತ್ತಾರೆ ಎಂದು ಹೇಳಿ ಚರ್ಚೆಗೆ ತೆರೆ ಎಳೆದರು. ಪರಿಷತ್ನಲ್ಲೂ ಗದ್ದಲ: ಶೂನ್ಯವೇಳೆಯಲ್ಲಿ ಬಿಜೆಪಿ ಎನ್.ರವಿಕುಮಾರ್ ಅವರು ವಿಷಯ ಪ್ರಸ್ತಾಪಿಸಿ ಸರ್ಕಾರ ಏಕಾಏಕಿ ಈ ರೀತಿ ಬದಲಾವಣೆ ಮಾಡಿರುವ ಉದ್ದೇಶವಾದರೂ ಏನು? ಮೊನ್ನೆ ಹಿಂದು ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದೆಂದು ಸುತ್ತೋಲೆ ಹೊರಡಿಸಲಾಗಿತ್ತು. ಈಗ ಕುವೆಂಪು ಅವರಿಗೆ ಅವಮಾನ ಮಾಡುವ ರೀತಿಯಲ್ಲಿ ಬದಲಾವಣೆ ಮಾಡಲಾಗಿದೆ.ಸರ್ಕಾರಕ್ಕೆ ಕೆಲಸವಿಲ್ಲವೇ ಎಂದು ಪ್ರಶ್ನಿಸಿದರು.
|
8 |
+
ಜೈನಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ
|
9 |
+
ಆಗ ಸಭಾ ನಾಯಕ ಭೋಸರಾಜ್ ಅವರು, ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಹೇಳಿದರು. ಇದನ್ನು ಒಪ್ಪದ ಬಿಜೆಪಿ ಸದಸ್ಯರು, ಈಗಲೇ ಉತ್ತರ ಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಸಭಾಪತಿ ಪೀಠದಲ್ಲಿ ಕುಳಿತಿದ್ದ ತೇಜಸ್ವಿನಿ ರಮೇಶ್ ಅವರು, ಶೂನ್ಯವೇಳೆ ಆಗಿರುವುದರಿಂದ ಚರ್ಚೆಗೆ ಅವಕಾಶವಿಲ್ಲ. ನೀವು ಬೇರೊಂದು ರೂಪದಲ್ಲಿ ಚರ್ಚೆಗೆ ಅವಕಾಶ ಕೊಡುತ್ತೇನೆ. ಈಗಾಗಲೇ ಸಭಾನಾಯಕರು ಸರ್ಕಾರದಿಂದ ಉತ್ತರ ಕೊಡಿಸುವುದಾಗಿ ಹೇಳಿದ್ದಾರೆಂದರು.
|
10 |
+
ಇದಕ್ಕೆ ತೃಪ್ತರಾಗದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾದರು. ಇದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು ಆರೋಪ-ಪ್ರತ್ಯಾರೋಪಗಳ ಸುರಿಮಳೆ ಗೈದರು. ಕಾಂಗ್ರೆಸ್ನ ಯು.ಬಿ.ವೆಂಕಟೇಶ್ ಅವರು, ಕ್ರಿಯಾಲೋಪ ಎತ್ತಿ ಶೂನ್ಯವೇಳೆಯಲ್ಲಿ ಕೇವಲ ವಿಷಯ ಪ್ರಸ್ತಾಪಕ್ಕೆ ಅವಕಾಶವಿದೆ. ಸದನದಲ್ಲಿ ಸಂಬಂಧಪಟ್ಟ ಸಚಿವರು ಇಲ್ಲದಿದ್ದಾಗ ಸಭಾ ನಾಯಕರು ಉತ್ತರಕೊಡಿಸುತ್ತೇನೆ ಎಂದಮೇಲೆ ಅಲ್ಲಿಗೆ ವಿಷಯವೇ ಮುಗಿಯುತ್ತದೆ. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಬಿಜೆಪಿ ಸದಸ್ಯರು ತರಾಟೆಗೆ ತೆಗೆದುಕೊಂಡರು.
|
11 |
+
ಈ ಹಂತದಲ್ಲೂ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಯಿತು. ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಕೂಗಿದರೆ ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಕೂಡ ತಿರುಗೇಟು ನೀಡಿದರು.ಸದನ ಸಹಜ ಸ್ಥಿತಿಗೆ ಬಾರದ ಕಾರಣ ಸದನವನ್ನು ಮುಂದೂಡಲಾಯಿತು.
|
eesanje/url_46_232_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ
|
2 |
+
ಬೆಂಗಳೂರು,ಫೆ.19- ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ಎಲ್ಲ ಹಂತದ ನಾಯಕರ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಿ ಬಿಜೆಪಿ ಚುನಾವಣಾ ಸಮಿತಿಗೆ ಪಟ್ಟಿಯನ್ನು ಕಳುಹಿಸಿಕೊಡುವಂತೆ ಕೇಂದ್ರ ವರಿಷ್ಠರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸೂಚಿಸಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆ ಮುಕ್ತಾಯವಾದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ ಮತ್ತಿತರ ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿರುವ ವಿಜಯೇಂದ್ರ ಲೋಕಸಭೆ ಚುನಾವಣೆಗೆ ಪೂರ್ವ ಸಿದ್ದತೆ ಕುರಿತಂತೆ ಮಾಹಿತಿ ನೀಡಿದ್ದಾರೆ.
|
3 |
+
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗ ಆಯ್ಕೆ , ಪ್ರದೇಶವಾರು, ಜಾತಿ, ಮತದಾರರ ನಾಡಿಮಿಡಿತ ಹೀಗೆ ಪ್ರತಿಯೊಂದು ಅಂಕಿಅಂಶಗಳ ವಿವರವುಳ್ಳ ಮಾಹಿತಿಯನ್ನು ವರಿಷ್ಠರಿಗೆ ನೀಡಿದ್ದಾರೆ. ಒಂದೊಂದು ಕ್ಷೇತ್ರಕ್ಕೂ ಮೂರಕ್ಕೂ ಹೆಚ್ಚು ಆಕಾಂಕ್ಷಿಗಳ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಾಗಿದ್ದು ಅಂತಿಮವಾಗಿ ವರಿಷ್ಠರೇ ತೀರ್ಮಾನಿಸಬೇಕೆಂದು ವಿಜಯೇಂದ್ರ ಮನವಿ ಮಾಡಿದ್ದಾರೆ.
|
4 |
+
ಪಟ್ಟಿಯನ್ನು ವೀಕ್ಷಣೆ ಮಾಡಿರುವ ವರಿಷ್ಠರು ಇನ್ನೊಂದು ಸುತ್ತಿನ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿ ಅಂತಿಮ ಪಟ್ಟಿಯನ್ನು ಕಳುಹಿಸಿಕೊಡಿ ಇದರಲ್ಲಿ ಯಾರಿಗೆ ಟಿಕಟ್ ನೀಡಬೇಕು ಎಂಬುದನ್ನು ನಾವೇ ತೀರ್ಮಾನಿಸುತ್ತೇವೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
|
5 |
+
ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ
|
6 |
+
ಮೂಲಗಳ ಪ್ರಕಾರ ಕೆಲವು ಕ್ಷೇತ್ರಗಳಿಗೆ ಒಂದೇ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಉತ್ತರ, ದಾವಣಗೆರೆ, ಕೊಪ್ಪಳ, ಬೆಳಗಾವಿ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 10ರಿಂದ 12 ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳ ಶಿಫಾರಸ್ಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೀಗ ವರಿಷ್ಠರ ಸೂಚನೆಯಂತೆ ವಿಜಯೇಂದ್ರ ವಿಧಾನಮಂಡಲದ ಕಲಾಪ ಮುಗಿದ ನಂತರ ಕೋರ್ ಕಮಿಟಿ ಸಭೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
|
eesanje/url_46_232_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಆಸ್ಪತ್ರೆಯಿಂದ ದೇವೇಗೌಡರು ಡಿಸ್ಚಾರ್ಜ್
|
2 |
+
ಬೆಂಗಳೂರು, ಫೆ.18- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಲಿದ್ದಾರೆ.ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಇಂದು ಅಥವಾ ನಾಳೆ ಮನೆಗೆ ಮರಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಸ್ಪಷ್ಟಪಡಿಸಿವೆ.
|
3 |
+
ಜ್ವರ ಹಾಗೂ ಕಫದ ತೊಂದರೆಯಿಂದಾಗಿ ಫೆ.15ರಂದು ಗೌಡರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ತಂಡದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ರಾಜ್ಯಸಭೆ ಅವೇಶನದಲ್ಲಿ ಭಾಗವಹಿಸಲು ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿನ ತೀವ್ರ ಚಳಿ ಹಾಗೂ ಮಾಲಿನ್ಯದಿಂದ ಗೌಡರ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು.
|
4 |
+
ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರವಾಗಿ ಮನೆಗೆ ಮರಳುವುದಾಗಿ ಹಾಗೂ ಆರೋಗ್ಯದ ಬಗ್ಗೆ ಯಾರು ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಗೌಡರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದರು.
|
5 |
+
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ ವಯೋಸಹಜ ಸಣ್ಣಪುಟ್ಟ ಸಮಸ್ಯೆಗಳಿಂದಾಗಿ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿರುವ ಗೌಡರು ಶೀಘ್ರವಾಗಿ ಮನೆಗೆ ಮರಳಲಿದ್ದಾರೆ ಎಂದು ತಿಳಿಸಿದ್ದರು.
|
eesanje/url_46_232_12.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜನರ ಮನೆ ಬಾಗಿಲಿಗೆ ಇ -ಖಾತಾ
|
2 |
+
ಬೆಂಗಳೂರು,ಫೆ.18- ಸಾರ್ವ ಜನಿಕರ ಆಸ್ತಿಗಳ ದಾಖಲೆಗಳ ದುರುಪಯೋಗ ವಾಗುವುದನ್ನು ತಡೆಗಟ್ಟಿ, ಮನೆಬಾಗಿಲಿಗೆ ಇ-ಖಾತಾ ದಸ್ತಾವೇಜುಗಳನ್ನು ತಲುಪಿಸ ಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಜ್ಞಾನಭಾರತಿ ಆವರಣದಲ್ಲಿ ರಾಜರಾಜೇಶ್ವರಿ ನಗರ, ಯಶವಂತಪುರ ವಿಧಾನಸಭಾ ಕ್ಷೇತ್ರಗಳ ಸಾರ್ವಜನಿಕರ ಸಮಸ್ಯೆ ಆಲಿಸಲು ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾತೆಗಳ ವಿಚಾರದಲ್ಲಿ ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ಆಸ್ತಿಗಳ ಖಾತೆ ಸೇರಿದಂತೆ ಎಲ್ಲಾ ದಾಖಲಾತಿಗಳನ್ನು ದುರುಪಯೋಗ ವಾಗದಂತೆ ಸರಿಪಡಿಸಲಾಗುವುದು.
|
3 |
+
ಇ-ಖಾತೆ ಮಾಡಿಸುವ ಮೂಲಕ ಅದನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತೇವೆ ಎಂದರು.ಬೆಂಗಳೂರಿನಲ್ಲಿ ಸರಿಯಾಗಿ ತೆರಿಗೆ ಪಾವತಿಯಾಗಿಲ್ಲ. 2020 ರಲ್ಲಿ ಬಿಜೆಪಿ ಸರ್ಕಾರ ದುಬಾರಿ ದಂಡ ವಿಸುವ ನಿಯಮ ರೂಪಿಸಿತ್ತು. ಅದನ್ನು ಸರಿಪಡಿಸಲು ಒಂದು ಅವಗೆ ಸರಳೀಕರಣ ಮಾಡುವ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ. ಈಗಾಗಲೇ ಸಂಪುಟದಲ್ಲಿ ಚರ್ಚಿಸಲಾಗಿದ್ದು, ವಿಧಾನಮಂಡಲದಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದರು.
|
4 |
+
ನ್ಯಾಯಯುತವಾದ ಹಾಗೂ ವೈಜ್ಞಾನಿಕವಾದ ತೆರಿಗೆ ನಿರ್ಧರಣೆಗೆ ಜನಸಾಮಾನ್ಯರಿಗೆ ಅವಕಾಶ ಕಲ್ಪಿಸಲಾಗುವುದು. ಅಧಿಕಾರಿಗಳ ಬಳಿ ಬಂದು ಸಾರ್ವಜನಿಕರು ಸ್ವಯಂ ಘೋಷಣೆ ಮಾಡಿಕೊಂಡು ತಪ್ಪನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದ್ದೇವೆ ಎಂದರು.ಸಂಸದ ಡಿ.ಕೆ.ಸುರೇಶ್ ಜನರ ಮನೆಬಾಗಿಲಿಗೆ ಹೋಗಿ ಸೇವೆ ಮಾಡುತ್ತಿದ್ದಾರೆ. ಪಂಚಾಯಿತಿ ಸದಸ್ಯರಂತೆ ರಸ್ತೆರಸ್ತೆ ಸುತ್ತಿದ್ದಾರೆ. ಇಂತಹ ಸಂಸದರನ್ನು ಹಿಂದೆಂದೂ ಜನ ನೋಡಿಲ್ಲ.
|
5 |
+
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ಜನ ಅವರನ್ನು ಬೆಂಬಲಿಸಿ ಋಣ ತೀರಿಸಬೇಕು. ಬಿಜೆಪಿಯವರು ಟಿವಿಯಲ್ಲಿ ಅಬ್ಬರಿಸುತ್ತಿದ್ದಾರೆ. ನಾವು ಜನರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಪಂಚಖಾತ್ರಿಗಳ ಮೂಲಕ ಜನರ ಜೀವನವನ್ನು ಸುಧಾರಿಸುವಂತೆ ಮಾಡಿದ್ದೇವೆ. ಹಿಂದೆ ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ರೂಪಿಸಿರಲಿಲ್ಲ ಎಂದು ಹೇಳಿದರು.ಮನೆಯ ಮೇಲೆ ಸೌರಶಕ್ತಿ ಫಲಕಗಳನ್ನು ಅಳವಡಿಸಿಕೊಳ್ಳಲು ಸಬ್ಸಿಡಿ ನೀಡಲಾಗುತ್ತಿದೆ. ಇದರಿಂದ ಮತ್ತಷ್ಟು ಉಳಿತಾಯ ಸಾಧ್ಯವಾಗಲಿದೆ ಎಂದರು.
|
6 |
+
ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿಲ್ಲ, ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ. ಬೆಲೆ ಏರಿಕೆ ನಿಯಂತ್ರಿಸಿ ಜನರಿಗೆ ಅನುಕೂಲ ಮಾಡಿಕೊಡಲು ಯತ್ನಿಸುತ್ತಿದ್ದೇವೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹಳೆಯ ಬೋರ್ವೆಲ್ಗಳನ್ನು ಮತ್ತೆ ರೀಡ್ರಿಲ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಮೇ ವೇಳೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು. ಮೇಕೆದಾಟು ನಿರ್ಮಾಣವಾದರೆ ಇನ್ನಷ���ಟು ಅನುಕೂಲವಾಗಲಿದೆ ಎಂದು ಹೇಳಿದರು.
|
7 |
+
ಆರಂಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮುನಿರತ್ನ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಯಾಗಿದ್ದರು ಎಂದು ಹೇಳಿದಾಗ ಮುನಿರತ್ನ ಹುಸಿನಗು ನಕ್ಕು ಸ್ಪಂದಿಸಿದರು. ವೇದಿಕೆಯ ಎಡಭಾಗದಲ್ಲಿ ಕೆಲವರು ಗಲಾಟೆ ಮಾಡುತ್ತಿದ್ದಾಗ ಡಿ.ಕೆ.ಶಿವಕುಮಾರ್ ಅವರನ್ನು ಗದರಿದರು. ಸಂಸದ ಡಿ.ಕೆ.ಸುರೇಶ್ ಎದ್ದು ಬಂದು ಅರ್ಜಿ ನೀಡುವ ನಿಗದಿತ ಸ್ಥಳಕ್ಕೆ ಹೋಗಿ ನಿಂತುಕೊಳ್ಳಿ, ಗಲಾಟೆ ಮಾಡಬೇಡಿ ಎಂದು ಸಮಾಧಾನ ಮಾಡಿದರು.
|
8 |
+
ನಂತರ ಮಾತು ಮುಂದುವರೆಸಿದ ಡಿ.ಕೆ.ಶಿವಕುಮಾರ್, ಕಾರ್ಯಕರ್ತರು, ಪೊಲೀಸ್ ಅಧಿಕಾರಿಗಳು ಇಲ್ಲಿ ನಿಲ್ಲುವ ಅಗತ್ಯವಿಲ್ಲ . ಹಿರಿಯ ನಾಗರಿಕರು ಹಾಗೂ ವಿಕಲ ಚೇತನರಿದ್ದಲ್ಲಿಯೇ ನಾನು ಮೊದಲು ಬಂದು ಸಮಸ್ಯೆ ಕೇಳುತ್ತೇನೆ. ಈಗಾಗಲೇ 12 ಕ್ಷೇತ್ರಗಳಲ್ಲಿ ಜನಸ್ಪಂದನ ನಡೆಸಿದ್ದು, 20 ಸಾವಿರ ಅರ್ಜಿಗಳು ನೋಂದಣಿ ಮಾಡಿಸಲಾಗಿದೆ. ಮುಖ್ಯಮಂತ್ರಿಯವರು 2 ಜನಸ್ಪಂದನ ಮಾಡಿದ್ದು, ಅಲ್ಲಿಯೂ ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಇದಕ್ಕೆಲ್ಲಾ ಪರಿಹಾರ ದೊರಕಿಸಲು ಅಧಿಕಾರಿಗಳ ಪ್ರತ್ಯೇಕ ತಂಡ ರಚಿಸಲಾಗುತ್ತದೆ. ನಾನು ಖುದ್ದು ನಿಗಾ ವಹಿಸುತ್ತೇನೆ ಎಂದರು.
|
9 |
+
ಜನಸಾಮಾನ್ಯರು ಸಚಿವರ, ಶಾಸಕರ ಮನೆಬಾಗಿಲಿಗೆ ಅಲೆಯಬಾರದು ಎಂಬ ಕಾರಣಕ್ಕೆ ಸರ್ಕಾರವೇ ನಿಮ್ಮ ಬಾಗಿಲಿಗೆ ಬಂದಿದೆ ಎಂದು ಹೇಳಿದರು. ಸರ್ಕಾರ ಜನಸಾಮಾನ್ಯರ ಜೊತೆಗಿದೆ. ಎಲ್ಲರ ಸಮಸ್ಯೆಗಳನ್ನೂ ಒಮ್ಮೆಲೆ ಬಗೆಹರಿಸಲಾಗುವುದಿಲ್ಲ. ಆದರೆ ಅರ್ಜಿ ಕೊಟ್ಟವರಿಗೆ ಖಂಡಿತಾ ಸ್ಪಂದಿಸಲಾಗುವುದು. ಈಗಾಗಲೇ ಹಲವು ಬಾರಿ ಅರ್ಜಿ ಕೊಟ್ಟು ಪರಿಹಾರ ಸಿಗದೆ ತಿರಸ್ಕಾರಗೊಂಡಿರುವವರು ಮತ್ತೆ ಮತ್ತೆ ಅರ್ಜಿ ಕೊಡುತ್ತಿರುವುದು ಕಂಡುಬರುತ್ತಿದೆ. ಪ್ರತಿಯೊಂದು ಜನಸ್ಪಂದನದಲ್ಲೂ 3 ರಿಂದ 4 ಸಾವಿರ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ನೋಂದಣಿಯಾಗಿ ರಶೀದಿ ಪಡೆದ ಅರ್ಜಿಗಳಿಗೆ ಪ್ರತಿಕ್ರಿಯೆ ಸಿಕ್ಕೇ ಸಿಗುತ್ತದೆ ಎಂದು ಭರವಸೆ ನೀಡಿದರು.
|
eesanje/url_46_232_2.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಅಕ್ರಮ-ಸಕ್ರಮ ಕಾಯ್ದೆಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸುವ ಸಾಧ್ಯತೆ
|
2 |
+
ಬೆಂಗಳೂರು,ಫೆ.19- ನಿಯಮ ಉಲ್ಲಂಘಿಸಿದ ಅನಧಿಕೃತ ನಿರ್ಮಾಣಗಳನ್ನು ಸಕ್ರಮೀಕರಣಗೊಳಿಸಲು ವಿಶೇಷವಾಗಿ ರೂಪಿಸಲಾಗಿದ್ದ ಅಕ್ರಮ-ಸಕ್ರಮ ಕಾಯ್ದೆಯನ್ನು ಸುಪ್ರೀಂಕೋರ್ಟ್ ತಿರಸ್ಕøತ ಮಾಡುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಕೃಷ್ಣಾಭೈರೇಗೌಡ ತಿಳಿಸಿದ್ದಾರೆ. ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಪ್ರಶ್ನೆ ಕೇಳಿ, 94 ಸಿ ಮತ್ತು 94 ಸಿಸಿ ಕಾನೂನಿನಡಿ ನಿವೇಶನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.
|
3 |
+
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, 2016, 2018, 2019, 2021, 2022 ರ ಮಾರ್ಚ್ 31 ರೊಳಗೆ 5 ಬಾರಿ ನಿವೇಶನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಮಾಹಿತಿ ಕೊರತೆ ಎಂದು ಹಲವು ಬಾರಿ ಕಾಲಾವಕಾಶ ನೀಡಿದ್ದೇವೆ. ನ್ಯಾಯಾಲಯಗಳು ಒಂದು ಬಾರಿ ಇನ್ನೊಂದು ಬಾರಿ ಎಂದು ಎಷ್ಟು ಬಾರಿ ಕಾಲಾವಕಾಶ ನೀಡುತ್ತೀರ ಎಂದು ಆಕ್ಷೇಪ ವ್ಯಕ್ತಪಡಿಸುತ್ತಿವೆ. ಕಾಲಾವಕಾಶ ನೀಡುವ ಮೂಲಕ ಅಕ್ರಮಗಳನ್ನು ಸಕ್ರಮಗೊಳಿಸಲಾಗುತ್ತಿದೆ ಎಂಬ ಆಕ್ಷೇಪವು ನ್ಯಾಯಾಲಯದಿಂದ ಬಂದಿದೆ. ವಕೀಲರು ನನಗೆ ನೀಡಿರುವ ಮಾಹಿತಿ ಪ್ರಕಾರ, ಸುಪ್ರೀಂಕೋರ್ಟ್ ತಡೆ ನೀಡಿದ್ದ ಅಕ್ರಮ-ಸಕ್ರಮ ಕಾಯ್ದೆ ವಿಚಾರಣೆ ಮಹತ್ವದ ಘಟ್ಟ ತಲುಪಿದೆ. ಬಹುತೇಕ ಕಾಯ್ದೆಯ ಔಚಿತ್ಯ ತಿರಸ್ಕಾರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು.
|
4 |
+
94 ಸಿ ಅಡಿ ರಾಜ್ಯಾದ್ಯಂತ 6,26,058 ಜನ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 1.63 ಲಕ್ಷ ಅರ್ಜಿಗಳು ಮಂಜೂರಾಗಿವೆ. 4,12,056 ಅರ್ಜಿಗಳು ಅನರ್ಹ ಎಂದು ತಿರಸ್ಕರಿಸಲಾಗಿದೆ. 94 ಸಿಸಿ ಅಡಿ 2,12,720 ಅರ್ಜಿಗಳು ಸ್ವೀಕಾರವಾಗಿದ್ದು, 69,236 ಅರ್ಜಿಗಳಿಗೆ ಮಂಜೂರಾತಿ ನೀಡಲಾಗಿದೆ. 1,28,531 ಅರ್ಜಿಗಳನ್ನು ಅನರ್ಹ ಎಂದು ತಿರಸ್ಕರಿಸಲಾಗಿದೆ. ಬಾಕಿ 50 ಸಾವಿರ ಉಳಿದಿದ್ದು, ಅವುಗಳನ್ನು ಶೀಘ್ರವೇ ಇತ್ಯರ್ಥಪಡಿಸಲಾಗುವುದು ಎಂದರು.
|
5 |
+
ಜೈನಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ
|
6 |
+
ತಿರಸ್ಕಾರಗೊಂಡಿರುವುದರಲ್ಲಿ ಪಕ್ಷಭೇದವಿಲ್ಲ. ಬಿಜೆಪಿ ಸರ್ಕಾರವೇ ಹೆಚ್ಚು ಅರ್ಜಿ ತಿರಸ್ಕರಿಸಿದೆ. ಅರ್ಜಿ ಸಲ್ಲಿಸಿದವರಲ್ಲಿ ಮತ್ತು ಮಂಜೂರು ಪಡೆದವರಲ್ಲಿ ಅನರ್ಹರೇ ಹೆಚ್ಚಿದ್ದಾರೆ. ಇತ್ತೀಚೆಗೆ ಪರಿಶೀಲನೆ ವೇಳೆ ನೆಲಮಂಗಲದಲ್ಲಿ ಒಂದು ನಿಯಮ ಬಾಹಿರ ಮಂಜೂರಾತಿ ಕಂಡುಬಂದಿತ್ತು. ಇದಕ್ಕೆ ಸಂಬಂಧಪಟ್ಟಂತೆ ತಹಸೀಲ್ದಾರರನ್ನು ಅಮಾನತುಪಡಿಸಿದ್ದಾಗಿ ಹೇಳಿದರು.
|
7 |
+
2015ರವರೆಗೆ ಮನೆ ನಿರ್ಮಿಸಿಕೊಂಡವರಿಗೆ ಮಂಜೂರಾತಿ ನೀಡಬೇಕು ಎಂಬ ನಿಯಮ ಇದೆ. ಈಗ ಶಾಸಕರು 2019 ರವರೆಗೂ ಮನೆ ನಿರ್ಮಿಸಿದವರಿಗೆ ಅವಕಾಶ ಮಾಡಿಕೊಡಿ ಎನ್ನುತ್ತಿದ್ದಾರೆ. ಇದರ ಅರ್ಥ 2015 ರ ನಂತರವೂ ಉದ್ದೇಶಪೂರಕವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ ಅಲ್ಲವೇ, ಈ ರೀತಿ ಎಷ್ಟು ಬಾರಿ ಅವಕಾಶ ನೀಡುವುದು ಎಂದು ಪ್ರಶ್ನಿಸಿದರು. ಈ ಬಾ���ಿ ಹಲವು ಶಾಸಕರು ಮತ್ತೊಂದು ಅವಗೆ ಅವಕಾಶ ನೀಡುವಂತೆ ಪುನರ್ ಉಚ್ಚರಿಸಿದರು.
|