CoolCoder44 commited on
Commit
ff16c44
·
verified ·
1 Parent(s): e320666

a961f2f0d99a97e6c5032a2653d381196f22c1bf909948a58c721e205fe5b4a8

Browse files
Files changed (50) hide show
  1. eesanje/url_46_176_6.txt +7 -0
  2. eesanje/url_46_176_7.txt +7 -0
  3. eesanje/url_46_176_8.txt +8 -0
  4. eesanje/url_46_176_9.txt +5 -0
  5. eesanje/url_46_177_1.txt +5 -0
  6. eesanje/url_46_177_10.txt +6 -0
  7. eesanje/url_46_177_11.txt +8 -0
  8. eesanje/url_46_177_12.txt +8 -0
  9. eesanje/url_46_177_2.txt +5 -0
  10. eesanje/url_46_177_3.txt +7 -0
  11. eesanje/url_46_177_4.txt +7 -0
  12. eesanje/url_46_177_5.txt +4 -0
  13. eesanje/url_46_177_6.txt +9 -0
  14. eesanje/url_46_177_7.txt +5 -0
  15. eesanje/url_46_177_8.txt +16 -0
  16. eesanje/url_46_177_9.txt +10 -0
  17. eesanje/url_46_178_1.txt +4 -0
  18. eesanje/url_46_178_10.txt +15 -0
  19. eesanje/url_46_178_11.txt +7 -0
  20. eesanje/url_46_178_12.txt +11 -0
  21. eesanje/url_46_178_2.txt +6 -0
  22. eesanje/url_46_178_3.txt +6 -0
  23. eesanje/url_46_178_4.txt +8 -0
  24. eesanje/url_46_178_5.txt +8 -0
  25. eesanje/url_46_178_6.txt +4 -0
  26. eesanje/url_46_178_7.txt +6 -0
  27. eesanje/url_46_178_8.txt +6 -0
  28. eesanje/url_46_178_9.txt +6 -0
  29. eesanje/url_46_179_1.txt +11 -0
  30. eesanje/url_46_179_10.txt +12 -0
  31. eesanje/url_46_179_11.txt +9 -0
  32. eesanje/url_46_179_12.txt +8 -0
  33. eesanje/url_46_179_2.txt +7 -0
  34. eesanje/url_46_179_3.txt +9 -0
  35. eesanje/url_46_179_4.txt +6 -0
  36. eesanje/url_46_179_5.txt +6 -0
  37. eesanje/url_46_179_6.txt +10 -0
  38. eesanje/url_46_179_7.txt +6 -0
  39. eesanje/url_46_179_8.txt +8 -0
  40. eesanje/url_46_179_9.txt +9 -0
  41. eesanje/url_46_17_1.txt +6 -0
  42. eesanje/url_46_17_10.txt +5 -0
  43. eesanje/url_46_17_11.txt +5 -0
  44. eesanje/url_46_17_12.txt +8 -0
  45. eesanje/url_46_17_2.txt +9 -0
  46. eesanje/url_46_17_3.txt +6 -0
  47. eesanje/url_46_17_4.txt +10 -0
  48. eesanje/url_46_17_5.txt +8 -0
  49. eesanje/url_46_17_6.txt +12 -0
  50. eesanje/url_46_17_7.txt +8 -0
eesanje/url_46_176_6.txt ADDED
@@ -0,0 +1,7 @@
 
 
 
 
 
 
 
 
1
+ ಮಧ್ಯರಾತ್ರಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಗದಗ-ಬೆಟಗೇರಿ
2
+ ಕೊಪ್ಪಳ,ಏ.19-ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಮನೆಯಲ್ಲಿ ಗುರುವಾರ ಮಧ್ಯ ರಾತ್ರಿ ನಾಲ್ವರ ಬರ್ಬರ ಹತ್ಯೆಯಾದ ಘಟನೆ ಅವಳಿ ನಗರವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.
3
+ ಮನೆಯಲ್ಲಿ ಮಲಗಿದ್ದ ಒಂದೆ ಕುಟುಂಬದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಗದಗ ನಗರದ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27) ಪರಶುರಾಮ (55) ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16 ) ಕೊಲೆಯಾದ ದುರ್ದೈವಿಗಳು.
4
+ ಕೊಪ್ಪಳದಿಂದ ಪ್ರಕಾಶ ಬಾಕಳೆ ಮನೆಗೆ ಬಂದಿದ್ದ ಪರುಶುರಾಮ, ಲಕ್ಷ್ಮಿ, ಅಕಾಂಕ್ಷಾ ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದರೆಂದು ಹೇಳಲಾಗುತ್ತಿದೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಗಳು ಕೊಲೆಯಾಗಿದ್ದು ವಿಯ ಅಟ್ಟಹಾಸ ಎಂಬಂತಾಗಿದೆ. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಿದ ಕುಟುಂಬಸ್ಥರು.
5
+ ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆಯೆ ದುಷ್ಕರ್ಮಿಗಳು ಎಸ್ಕೇಪ್ ಆದರೆಂದು ತಿಳಿದು ಬಂದಿದೆ. ಒಂದು ವೇಳೆ ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ದರೆಂದು ಮನೆ ಮಾಲೀಕ ಪ್ರಕಾಶ್ ಬಾಕಳೆ ಹೇಳಿದ್ದು ಇನ್ನಷ್ಟು ಭಯವನ್ನುಂಟು ಮಾಡಿದೆ.
6
+ ಪೋಲಿಸರು ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಬಿ.ಎಸ್.ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ.ಸಂಕದ, ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಸೇರಿ ಪೋಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
7
+ ದುಷ್ಕರ್ಮಿಗಳ ಬಂದನಕ್ಕೆ ಜಾಲ :ಈ ಘಟನೆಗೆ ಸಂಬಂಸಿ ನಿಖರವಾದ ಮಾಹಿತಿ ಸಿಕ್ಕಿಲ್ಲ ತನಿಖೆ ತೀವ್ರಗತಿಯಲ್ಲಿ ಸಾಗಿದ್ದು ದುಷ್ಕರ್ಮಿಗಳನ್ನು ತೀವ್ರವಾಗಿ ಪತ್ತೆ ಮಾಡಿ ಬಂದಿಸಲಾಗುವದೆಂದು ಎಸ್ಪಿ ಬಿ.ಎಸ್.ನೇಮಗೌಡ್ರ ತಿಳಿಸಿದ್ದಾರೆ. ಕೊಲೆಗೆ ಕಾರಣ ಏನು ? ಎಂಬುದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.
eesanje/url_46_176_7.txt ADDED
@@ -0,0 +1,7 @@
 
 
 
 
 
 
 
 
1
+ ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ
2
+ ಹುಬ್ಬಳ್ಳಿ,ಏ.19-ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ ವಹಿಸಿ ತನಿಖೆ ನಡೆಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
3
+ ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್‍ಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದ ಕಗ್ಗೊಲೆಯಾಗಿದೆ ಎಂದು ದೂರಿದರು.
4
+ ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೆಲೆ ಹಲ್ಲೆಯಾಗಿದೆ. ಸಮಾಜ ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗುಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭಿರವಾಗಿ ಪರಿಣಗಿಸಬೇಕು. ಮುಖ್ಯಮಂತ್ರಿಗಳು ಒಂದು ಟ್ವೀಟ್ ಮಾಡಿ ಕೈ ತೊಳೆದುಕೊಳ್ಳಬಾರದು ಎಂದು ಹೇಳಿದರು.
5
+ ಇದು ಕೇವಲ ವೈಯಕ್ತಿಕ ಘಟನೆ. ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕರ್ನಾಟಕ ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ. ಈ ಸರ್ಕಾರದ ಅವಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗದಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.
6
+ ಹುಬ್ಬಳ್ಳಿ ಕಮೀಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ಮೂಲಕ ತನಿಖೆ ನಡೆಸಬೇಕು. ಅಪರಾಧ ವಿಭಾಗದ ಡಿಜಿಪಿ ಅವರು ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
7
+ ಕುಟುಂಬಕ್ಕೆ ಸಾಂತ್ವನ:ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.
eesanje/url_46_176_8.txt ADDED
@@ -0,0 +1,8 @@
 
 
 
 
 
 
 
 
 
1
+ ಜೈಶ್ರೀರಾಮ್ ಘೋಷಣೆಗೆ ಯಾರ ಅನುಮತಿಯೂ ಬೇಕಿಲ್ಲ : ಅಶ್ವತ್ಥ ನಾರಾಯಣ
2
+ ಬೆಂಗಳೂರು,ಏ.18-ನಮ್ಮ ರಾಜ್ಯದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಬಾರದೆಂದು ರಾಜಾರೋಷವಾಗಿ ಹಿಂದೂ ಕಾರ್ಯಕರ್ತರಿಗೆ ಬಹಿರಂಗವಾಗಿಯೇ ಜೀವ ಬೆದರಿಕೆ ಹಾಕುತ್ತಾರೆ ಎಂದರೆ ಇಂತಹ ದೇಶದ್ರೋಹಿಗಳಿಗೆ ಕಾಂಗ್ರೆಸ್ ಕುಮ್ಮಕ್ಕೇ ಕಾರಣ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ಸರ್ಕಾರದ ವಿರುದ್ಧ ಕೆಂಡ ಕಾರಿದರು.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಆರಾಧ್ಯ ದೈವ, ಮರ್ಯಾದ ಪುರುಷೋತ್ತಮ ಶ್ರೀರಾಮ್ ಘೋಷಣೆ ಕೂಗಲು ಯಾರ ಅನುಮತಿ ಬೇಕಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ ನಾವು ಏನೂ ಬೇಕಾದರೂ ಮಾಡಬಹುದೆಂದು ಒಂದು ಕೋಮಿನವರಿದ್ದಾರೆ. ಇದಕ್ಕೆಲ್ಲ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.
4
+ ಜೈ ಶ್ರೀರಾಮ್ ಎನ್ನಲು ಯಾರ ಅನುಮತಿಯೂ ಬೇಕಾಗಿಲ್ಲ. ಇವರು ಇಬ್ಬರಿಗೆ ಧಮ್ಕಿ ಹಾಕಿರಬಹುದು. ಲಕ್ಷಾಂತರ ಕಾರ್ಯಕರ್ತರು, ಜೈ ಶ್ರೀರಾಮ್ ಎಂದು ಕೂಗುತ್ತಾರೆ. ನಿಮಗೆ ತಾಕತ್ತಿದ್ದರೆ ತಡೆಯಿರಿ ಎಂದು ಸವಾಲು ಹಾಕಿದರು.
5
+ ಇದು ಭಾರತ. ನಮಗೆ ಶ್ರೀರಾಮ ಆದರ್ಶ. ಜೈಶ್ರೀರಾಮ್ ಎಂದು ಕೂಗೇ ಕೂಗುತ್ತೇವೆ. ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಅಲ್ಲಾ ಎಂದು ಮಾತ್ರ ಹೇಳಿ, ಶ್ರೀರಾಮ್ ಹೇಳಬೇಡಿ ಅಂದರೆ ಏನಿದು..? ಇಂಥವರಿಗೆಲ್ಲ ಕಾಂಗ್ರೆಸ್ ಪ್ರಚೋದನೆ ಇದೆ ಎಂದು ಆರೋಪಿಸಿದರು.ನಾವೇನ್ ಘೋಷಣೆ ಕೂಗಬೇಕು, ಏನು ಪೂಜೆ ಮಾಡಬೇಕು ಎಂಬ ದುಸ್ಥಿತಿಗೆ ಬಂದಿದೆಯಾ? ಬಹುಸಂಖ್ಯಾತರ ಭಾವನೆಗಳಿಗೆ ಸ್ಪಂದಿಸದ ಸರ್ಕಾರ ಇರಬಾರದು. ತಕ್ಷಣವೇ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.
6
+ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿಂದಲೂ ತುಷ್ಟೀಕರಣ ರಾಜಕಾರಣ, ಅದರ ಬಿಸಿ, ಅದರ ಪ್ರಭಾವ ನಿತ್ಯ ಕಾಣುತ್ತಿದೆ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಎಂದು ದೂರಿದರು. ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡೋರಿಗೆ ಬ್ರದರ್ಸ್, ರಾಮೇಶ್ವರಂ ಬ್ಲಾಸ್ಟ್ ಪ್ರಕರಣ, ಪಾಕಿಸ್ತಾನ ಜಿಂದಾಬಾದ್ ಎಲ್ಲದರಲ್ಲೂ ಸರ್ಕಾರದ ತುಷ್ಟೀಕರಣ ಎದ್ದು ಕಾಣುತ್ತಿದೆ. ವಿದ್ಯಾರಣ್ಯಪುರ ಘಟನೆ ನೋಡಿದಾಗ ನಾವೆಲ್ಲಿದ್ದೀವಿ ಅನ್ನೋ ಅನುಮಾನ ಬರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
7
+ ಕಾಂಗ್ರೆಸ್ನ ಸಂಸ್ಕೃತಿನೇ ಹಾಗೇ ಅವರದ್ದು ಬರೀ ಕಬಳಿಕೆ ಕಬಳಿಕೆ. ಮಾಜಿ ಪ್ರಧಾನಿ ದೇವೇಗೌಡರು ಮಾಡಿರುವ ಆರೋಪಕ್ಕೆ ಮೊದಲು ಡಿ.ಕೆ.ಶಿವಕುಮಾರ್ ಉತ್ತರ ಕೊಡಬೇಕು, ಅದು ಬಿಟ್ಟು ಉಡಾಫೆಯಾಗಿ ಮಾತನಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.ನಿನ್ನೆ ಕನಕಪುರದಲ್ಲಿ ಜನ ಸಾಗರವೇ ಹರಿದುಬಂದಿತ್ತು. ಕನಕಪುರದಲ್ಲೇ ಡಿಕೆ ಸಹೋದರರಿಗೆ ಮತ ಹಾಕಿ ಏನು ಪ್ರಯೋಜನ ಎನ್ನುತ್ತಿದ್ದಾರೆ. ಡಿ.ಕೆ.ಸುರೇಶ್ಗೂ ಹಾಗೂ ಡಾ.ಮಂಜುನಾಥ್ ಅವರಿಗೂ ಅಜಗಜಾಂತರ ವ್ಯತ್ಯಾಸ ಇದೆ. ರಾಹುಲ್ ಗಾಂ, ಡಿ.ಕೆ ಸುರೇಶ್ ಒಂದು ಕಡೆ ನರೇಂದ್ರ ಮ���ದಿ, ಸಿ.ಎನ್.ಮಂಜುನಾಥ್ ಜೋಡಿ ಒಂದು ಎಂದರು.
8
+ ಲೋಕಸಭಾ ಚುನಾವಣೆಯಲ್ಲಿ ಏನಾದರೂ ಮಾಡಿ ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಪಕ್ಷ ಎಲ್ಲಾ ತಂತ್ರವನ್ನು ಮಾಡುತ್ತಿದೆ. ಅದಕ್ಕೆ ಒಂದು ನಿಯಮ ಇಲ್ಲ ನೀತಿ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಸ್ಥಾನವೂ ಬರುವುದಿಲ್ಲ. ಅವರ ನಾಯಕನೇ ಕ್ಷೇತ್ರ ಹುಡುಕುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
eesanje/url_46_176_9.txt ADDED
@@ -0,0 +1,5 @@
 
 
 
 
 
 
1
+ ಕಚೇರಿಗೆ ನುಗ್ಗಿ ಬಿಜೆಪಿ ಮುಖಂಡನಿಗೆ ಕಾಂಗ್ರೆಸ್ ನಾಯಕರಿಂದ ಧಮ್ಕಿ
2
+ ಬೆಂಗಳೂರು, ಏ.18-ಏಕಾಏಕಿ ಬಿಜೆಪಿ ಕಚೇರಿಗೆ ನುಗ್ಗಿ ಇಲ್ಲಿ ಪ್ರಚಾರ ಮಾಡಬಾರದು, ಟೇಬಲ್ ಹಾಕಂಗಿಲ್ಲ, ನಾವು ಹೇಳಿದಂತೆ ಕೇಳಿದಿದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದು ಬಿಜೆಪಿ ಮುಖಂಡನಿಗೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ಹಾಗೂ ಇತರರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
3
+ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬೇಗೂರು ವಾರ್ಡಿನ ಬಿಜೆಪಿ ಮುಖಂಡರಾದ ದೊಡ್ಡಕಮ್ಮನಹಳ್ಳಿ ನಿವಾಸಿ ಅಭಿಷೇಕ್ ಅವರು ನಿನ್ನೆ ರಾತ್ರಿ 8 ಗಂಟೆ ಸುಮಾರಿನಲ್ಲಿ ಆಂಜನೇಯ ದೇವಾಲದ ಸಮೀಪ ಬಿಜೆಪಿ ಕಚೇರಿಯಲ್ಲಿ ಸ್ನೇಹಿತರೊಂದಿಗೆ ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದರು.
4
+ ಆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕಮ್ಮನಹಳ್ಳಿ ಶ್ರೀನಿವಾಸ್ ತನ್ನ ಹಿಂಬಾಲಕರೊಂದಿಗೆ ಹೋಗಿ ಏಕಾಏಕಿ ಕಚೇರಿಯೊಳಗೆ ನುಗ್ಗಿ ಅಭಿಷೇಕ್ ಅವರಿಗೆ ಧಮ್ಕಿ ಹಾಕಿದ್ದಾರೆ.ಆ ವೇಳೆ ಆತಂಕಗೊಂಡು ಕಚೇರಿಯಿಂಧ ಹೊರ ಬರಲು ಅಭಿಷೇಕ್ ಹಾಗೂ ಸ್ನೇಹಿತ ಮಂಜುನಾಥ್ ಯತ್ನಿಸಿದಾಗ ಅವರನ್ನು ತಡೆದು ಹಲ್ಲೆ ನಡೆಸಿ, ನೀವಿಲ್ಲಿ ಬಿಜೆಪಿ ಪರ ಪ್ರಚಾರ ಮಾಡಂಗಿಲ್ಲ, ಟೇಬಲ್ ಹಾಕಬಾರದು, ಒಂದು ವೇಳೆ ನಾನು ಹೇಳಿದ ಹಾಗೆ ಕೇಳದಿದ್ದರೆ ಪರಿಣಾಮ ಬೇರೆ ರೀತಿಯೇ ಆಗುತ್ತದೆ ಎಂದು ಬೆದರಿಸಿದ್ದಾರೆ.
5
+ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ವರ್ತನೆಯಿಂದ ಆತಂಕಗೊಂಡ ಅಭಿಷೇಕ್ ಅವರು ತಕ್ಷಣ ಹುಳಿಮಾವು ಪೊಲೀಸರಿಗೆ ದೂರು ನೀಡಿ ಬೆದರಿಕೆ ಹಾಕಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_177_1.txt ADDED
@@ -0,0 +1,5 @@
 
 
 
 
 
 
1
+ ಮುಂದಿನ ಅವಧಿಗೂ ಕಾಂಗ್ರೆಸ್‍ನದ್ದೇ ಸರ್ಕಾರ, ಮುಂದುವರಿಯಲಿವೆ ಗ್ಯಾರಂಟಿಗಳು : ಸಿಎಂ
2
+ ಬೆಂಗಳೂರು, ಏ.18-ಪ್ರಸಕ್ತ ಅವಧಿಗಷ್ಟೇ ಅಲ್ಲ, ಮುಂದಿನ ಅವಧಿಗೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಗ್ಯಾರಂಟಿ ಯೋಜನೆಗಳನ್ನು ಅಬಾತವಾಗಿ ಮುಂದುವರೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಕಾಂಗ್ರೆಸ್‍ನ ಪಂಚಖಾತ್ರಿ ಯೋಜನೆಗಳು ತಾತ್ಕಾಲಿಕ. ಲೋಕಸಭಾ ಚುನಾವಣೆ ಬಳಿಕ ಅವು ಸ್ಥಗಿತಗೊಳ್ಳುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರೇನು ಶಾಸ್ತ್ರ ಹೇಳುತ್ತಾರೆಯೇ? ಎಂದು ಕಿಡಿಕಾರಿದರು.
4
+ ತಾತ್ಕಾಲಿಕ ಎಂದರೆ ಏನರ್ಥ? ಈ ಅವಧಿ ಮುಂದಿನ ಅವಧಿಗೂ ನಾವೇ ಅಧಿಕಾರದಲ್ಲಿರುತ್ತೇವೆ. ಯಾವ ಕಾರಣಕ್ಕೂ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಮುಂದಿನ ವರ್ಷಕ್ಕೆ 52 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿಗಾಗಿ ಬಜೆಟ್‍ನಲ್ಲಿ ಮೀಸಲಿಡಲಾಗಿದೆ ಎಂದು ತಿಳಿಸಿದರು.
5
+ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ವಾತಾವರಣದ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಪರವಾದ ಅಲೆಯಿದೆ. ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
eesanje/url_46_177_10.txt ADDED
@@ -0,0 +1,6 @@
 
 
 
 
 
 
 
1
+ ದ್ವಾರಕೀಶ್ ಚಿತ್ರರಂಗ ಸೇವೆ ಅಪಾರವಾದದ್ದು : ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಏ.17-ನಟ, ನಿರ್ಮಾಪಕ ಹಾಗೂ ನಿರ್ದೇಶಕ ದ್ವಾರಕೀಶ್ ಅವರ ನಿಧನ ಇಡೀ ಕನ್ನಡಿಗರಿಗೆ ಬಹಳ ನೋವುಂಟು ಮಾಡಿದ್ದು, ನನಗೂ ನೋವುಂಟು ಮಾಡಿದೆ. ಅವರ ಅಗಲುವಿಕೆಯಿಂದ ಕನ್ನಡಿಗರಿಗೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
3
+ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅಪಾರ ಕೊಡುಗೆ ನೀಡಿದ್ದಾರೆ. ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ದ್ವಾರಕೀಶ್ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಅದನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ ಅಷ್ಟೆ ಅಲ್ಲ, ನಾಯಕ ನಟರಾಗಿ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಡಾ.ರಾಜ್ ಕುಮಾರ್ ಮತ್ತು ದ್ವಾರಕೀಶ್ ಅವರ ಜೋಡಿ ಚೆನ್ನಾಗಿತ್ತು.
4
+ ವಿಷ್ಣುವರ್ಧನ್, ಅಂಬರೀಶ್ ಜೊತೆ ಕೆಲಸ ಮಾಡಿದ್ದರು, ಚಿತ್ರರಂಗದಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದರು. ಎಷ್ಟೆ ಕಷ್ಟ ಬಂದರೂ ಸಹಿಸಿಕೊಂಡು ಚಿತ್ರರಂಗ ಬೆಳೆಯಲು ಅಪಾರ ಕೊಡುಗೆ ನೀಡಿದ್ದರು ಎಂದರು.ಎಲ್ಲಕ್ಕಿಂತ ಮುಖ್ಯವಾಗಿ ಅವರು ನಮ್ಮ ಊರಿನವರು, ಮೈಸೂರಿನವರು, ಹುಣಸೂರಿನಲ್ಲಿ ಹುಟ್ಟಿ, ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿದವರು.
5
+ ಮೈಸೂರು ಕಂಡರೆ ಅವರಿಗೆ ಹೆಚ್ಚು ಪ್ರೀತಿ ಇತ್ತು. ನಾನು ಅವರು ಒಮ್ಮೆ ಬೆಂಗಳೂರಿನಿಂದ ಹೆಲಿಕಾಫ್ಟರ್‍ನಲ್ಲಿ ಮೈಸೂರಿಗೆ ಹೋಗಿದ್ದೇವು. ಅಲ್ಲಿ ರೇಸ್ ಕೋರ್ಸ್‍ನಲ್ಲಿ ಇಳಿದಿದ್ದೇವು. ದಾರಿಯುದ್ದಕ್ಕೂ ಸಿನಿಮಾ, ರಾಜಕೀಯ, ಸಾಮಾಜಿಕ ವಿಚಾರಗಳು ಸೇರಿ ಅನೇಕ ವಿಚಾರಗಳನ್ನು ಚರ್ಚೆ ಮಾಡಿದ್ದೇವು. ಕನ್ನಡದ ಸೇವೆ ಮಾಡಿದ ಅಪರೂಪದ ನಟ ಎಂದು ಕೊಂಡಾಡಿದರು.
6
+ ಮರಣಾನಂತರ ನೇತ್ರದಾನ ಮಾಡಿರುವುದು ಶ್ಲಾಘನೀಯ, ಸತ್ತ ಮೇಲೂ ಸಾಮಾಜಿಕ ಸೇವೆ ಮಾಡಿರುವ ಅವರು ಮಾದರಿಯಾಗಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಬಹಳ ಬಡವಾಗಿದೆ. ಧರ್ಮಪತ್ನಿ ಕಾಲವಾದ ದಿನವೇ ದ್ವಾರಕೀಶ್ ನಿಧನರಾಗಿದ್ದಾರೆ. ಇಬ್ಬರ ಆತ್ಮಕ್ಕೂ ಶಾಂತಿ ಸಿಗಲಿಲ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
eesanje/url_46_177_11.txt ADDED
@@ -0,0 +1,8 @@
 
 
 
 
 
 
 
 
 
1
+ ನಾಳೆಯಿಂದ ಮೂರು ದಿನ ಸಿಇಟಿ ಪರೀಕ್ಷೆ
2
+ ಬೆಂಗಳೂರು, ಏ.17-ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಮೂರು ದಿನ ನಡೆಯಲಿರುವ ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
3
+ ಭಾರೀ ಬಿಗಿಭದ್ರತೆಯೊಂದಿಗೆ ಪರೀಕ್ಷೆ ನಡೆಸಲಿದೆ. ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಪ್ರವೇಶ ಪತ್ರದೊಂದಿಗೆ ನೀಡಿದೆ. ವಿದ್ಯಾರ್ಥಿ ಜೀವನದ ಮಹತ್ವ ಘಟ್ಟವೆಂದೇ ಪರಿಗಣಿಸಲಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಒಂದು ವಾರದ ಬಳಿಕ ಸಿಇಟಿ ಪರೀಕ್ಷೆ ಆರಂಭವಾಗುತ್ತಿದೆ. ಕಳೆದ ವರ್ಷಕ್ಕಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯಲಿದ್ದಾರೆ.
4
+ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಸೇರಬಯಸುವವರು ಸೇರಿದ್ದಾರೆ. ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥ್ಗಿಳಲ್ಲಿ 3,49,637 ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಿದ್ದಾರೆ.
5
+ 3,18.865 ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಒಟ್ಟು 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹತೆ ಹೊಂದಿದ್ದಾರೆ. ನಾಳೆ ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. ಏ.19ರಂದು ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏ.20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಮಾತ್ರಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ.
6
+ ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಡ್ರೈವಿಂಗ್ ಲೈಸೆನ್ಸ್, ಪಾಸ್‍ ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ದ್ವಿತೀಯ ಪಿಯುಸಿ ಪ್ರವೇಶ ಪತ್ರ ತೆಗೆದುಕೊಂಡು ಹೋಗಬೇಕು.
7
+ ಪರೀಕ್ಷಾ ಕೋಠಡಿಗೆ ಯಾವುದೇ ರೀತಿಯ ಕೈಗಡಿಯಾರ ತೆಗೆದುಕೊಂಡು ಹೋಗುವಂತಿಲ್ಲ. ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಸ್ಲೈಡ್ ರೂಲ್ಸ್, ಕ್ಯಾಲ್ಕ್ಯುಲೇಟರ್, ವೈಟ���‍ಫ್ಲ್ಯೂಯಿಡ್, ವೈರ್ಲೆಸ್ ಸೆಟ್ಸ್, ಪೇಪರ್ ಚೀಟಿ, ಬುಕ್ಸ್, ಪುಸ್ತಕ ಮೊದಲಾದುವುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವುದನ್ನು ನಿಷೇಧಿಸಿದೆ.
8
+ ಅಭ್ಯರ್ಥಿಗಳು ಪರೀಕ್ಷೆಯು ಪ್ರಾರಂಭವಾಗುವ ಮೊದಲನೆಯ ಬೆಲ್ ಆಗುವ ಕನಿಷ್ಟ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಿರಬೇಕು. ಮೂರನೇ ಬೆಲ್ ಆದ ನಂತರ ಪರೀಕ್ಷಾ ಕೊಠಡಿ ಪ್ರವೇಶಿಸಲು ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ನು ಮಾತ್ರ ಬಳಸಬೇಕು ಎಂದು ತಿಳಿಸಿದೆ.
eesanje/url_46_177_12.txt ADDED
@@ -0,0 +1,8 @@
 
 
 
 
 
 
 
 
 
1
+ ಕೋವಿಡ್ ಹೆಸರಿನಲ್ಲಿ ವಂಚಿಸಿದ್ದವರ ವಿರುದ್ಧ ಕ್ರಮಕ್ಕೆ ಎನ್.ಆರ್.ರಮೇಶ್ ಆಗ್ರಹ
2
+ ಬೆಂಗಳೂರು,ಏ.16-ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಲಕ್ಷಾಂತರ ರೂ.ಗಳನ್ನು ಬಿಬಿಎಂಪಿಗೆ ವಂಚಿಸಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ಹಾಗೂ ಬಿಎಂಟಿಎಫ್ಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
3
+ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ ಆರೋಗ್ಯ ಅಧಿಕಾರಿಯಾಗಿದ್ದ ಡಾ. ಸವಿತ ಮತ್ತು ಶಾಂತಿನಗರ ವಿಭಾಗದ ಆರೋಗ್ಯ ವೈದ್ಯಾಧಿಕಾರಿಗಳಾಗಿದ್ದ ಶ್ರೀನಿವಾಸ್ ಗೌಡ ಅವರು ಭಾರಿ ಅಕ್ರಮ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
4
+ ಆರೋಪಿಗಳು ಶಾಂತಿನಗರ ರೇಂಜ್ ಕೋವಿಡ್ ಸ್ಟಾಪ್ ಡಿಇಒ ಮತ್ತು ಸ್ವಾಬ್ ಕಲೆಕ್ಟರ್ ಸ್ಯಾಲರಿ ಬಿಲ್ ಎಂಬ ಹೆಸರಿನಲ್ಲಿ ಆರೋಗ್ಯ ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಖಾತೆಗಳಿಗೆ ತಲಾ ಎಪ್ಪತ್ತೈದು ಸಾವಿರದ ಇನ್ನೂರಾ ಇಪ್ಪತ್ತೈದು ರೂ.ಗಳನ್ನು ನೇರವಾಗಿ ಡಿಸಿ ಬಿಲ್ಗಳ ಮೂಲಕ ವರ್ಗಾವಣೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿರುತ್ತದೆ.
5
+ ಮೇಲೆ ತಿಳಿಸಿರುವ ಕಾರ್ಯವು ಸಂಪೂರ್ಣ ಕಾನೂನು ಬಾಹಿರ ಕಾರ್ಯವಾಗಿದ್ದು, ವಲಯ ಆಯುಕ್ತರ ಅನುಮೋದನೆಯನ್ನು ಪಡೆಯದೇ ಮತ್ತು ವಿಶೇಷ ಆಯುಕ್ತರು (ಆರೋಗ್ಯ) ರವರ ಅನುಮತಿಯನ್ನು ಪಡೆಯದೆಯೇ ನೇರವಾಗಿ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೂರ್ವ ವಲಯ ಆರೋಗ್ಯ ಅಧಿಕಾರಿಗಳಾಗಿದ್ದ ಡಾ. ಸವಿತರವರು ಮತ್ತು ಶಾಂತಿನಗರ ವಿಭಾಗದ ಆರೋಗ್ಯ ವೈದ್ಯಾಧಿಕಾರಿ ಗಳಾಗಿದ್ದ ಡಾ. ಶ್ರೀನಿವಾಸ್ ಗೌಡ ರವರು ಸೇರಿಕೊಂಡು ಪಾಲಿಕೆಗೆ ಹತ್ತಾರು ಲಕ್ಷ ರೂಪಾಯಿಗಳನ್ನು ವಂಚಿಸಿರುತ್ತಾರೆ.
6
+ ಅಲ್ಲದೇ, ಯಾವುದೇ ಹಿರಿಯ ಮತ್ತು ಕಿರಿಯ ಆರೋಗ್ಯ ಪರಿವೀಕ್ಷಕರ ಗಮನಕ್ಕೆ ತಾರದೆಯೇ ಅವರವರ ಖಾತೆಗಳಿಗೆ ಹಣವನ್ನು ವರ್ಗಾಯಿಸಿ ನಂತರ ಈ ಹಣವನ್ನು ಡಾ.ಸವಿತ ಅವರ ಮಗನಾದ ಸಿದ್ಧರಾಜು ಚಿರಾಗ್ ಎಂಬುವವರ ಖಾತೆಗೆ ವರ್ಗಾವಣೆ ಮಾಡಿಕೊಂಡಿರುತ್ತಾರೆ.
7
+ ಈ ಸಂಬಂಧ ಪಾಲಿಕೆಗೆ ಹತ್ತಾರು ಲಕ್ಷ ರೂಪಾಯಿಗಳಷ್ಟು ಹಣವನ್ನು ವಂಚನೆ ಮಾಡಿರುವ ಪೂರ್ವ ವಲಯದ ಆರೋಗ್ಯ ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾನ್ಯ ಮುಖ್ಯ ಆಯುಕ್ತರನ್ನು ಮತ್ತು ಆಡಳಿತಾಕಾರಿಗಳನ್ನು ಅಗ್ರಹಿಸಿದ್ದಾರೆ.
8
+ ಹಾಗೆಯೇ, ಈ ಇಬ್ಬರು ಅಧಿಕಾರಿಗಳ ವಿರುದ್ಧ ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಪ್ರಕರಣ ಗಳನ್ನು ದಾಖಲಿಸಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಬಿಎಂಟಿಎಫ್ನಲ್ಲಿ ದಾಖಲೆಗಳ ಸಹಿತ ದೂರು ದಾಖಲಿಸಿದ್ದಾರೆ.
eesanje/url_46_177_2.txt ADDED
@@ -0,0 +1,5 @@
 
 
 
 
 
 
1
+ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಏ.21 ರವರೆಗೆ ಅಂಚೆ ಮತದಾನ
2
+ ಬೆಂಗಳೂರು, ಏ.18-ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಏ.21 ರವರೆಗೆ ಅಗತ್ಯ ಸೇವೆಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಅಂಚೆ ಮತದಾನದ ಸೌಲಭ್ಯ ಕಲ್ಪಿಸಲಾಗಿದೆ.
3
+ ಭಾರತ ಚುನಾವಣಾ ಆಯೋಗ ಅಗತ್ಯ ಸೇವೆಗಳೆಂದು ಗುರುತಿಸಿರುವ ವಿದ್ಯುಚ್ಛಕ್ತಿ, ಬಿಎಸ್‍ಎನ್‍ಎಲ್, ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ, ವಿಮಾನಯಾನ, ಸಾರಿಗೆ ಸೇವೆ, ಅಗ್ನಿಶಾಮಕ ಸೇವೆಗಳು, ಸಂಚಾರಿ ಪೊಲೀಸ್, ಆಂಬ್ಯುಲೆನ್ಸ್ ಸೇವೆಗಳು, ಬೆಂಗಳೂರು ಮೆಟ್ರೋ ರೈಲು ನಿಗಮ, ಕಂಟ್ರೋಲ್ ರೂಂ, ಗ್ರಾಮೀಣ ಮತ್ತು ನಗರ ಕುಡಿಯುವ ನೀರು ಸರಬರಾಜು ಇಲಾಖೆ, ಬಂಧೀಖಾನೆ ಇಲಾಖೆ ಹಾಗೂ ಮತದಾನದ ದಿನ ಸುದ್ದಿ ಪ್ರಸಾರ ಮಾಡಲು ಅಧಿಕೃತಗೊಳಿಸಿದ ಮಾಧ್ಯಮದ ವರದಿಗಾರರು ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
4
+ ನಾಳೆ ಬೆಳಿಗ್ಗೆ 9 ರಿಂದ ಏ.21 ರ ಸಂಜೆ 5 ಗಂಟೆವರೆಗೆ ಅಂಚೆ ಮತದಾನ ಕೇಂದ್ರಗಳಲ್ಲಿ ಅಗತ್ಯ ಸೇವೆಯಲ್ಲಿ ತೊಡಗಿರುವವರು ಮತದಾನ ಮಾಡಬಹುದಾಗಿದೆ.ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಅಂಚೆ ಮತದಾನ ನಾಳೆಯಿಂದ ಮೂರು ದಿನ ನಡೆಯಲಿದೆ.
5
+ ಆಯಾ ಕ್ಷೇತ್ರದಲ್ಲಿ ತಲಾ ಒಂದು ಅಂಚೆ ಮತದಾನ ಕೇಂದ್ರವನ್ನು ತೆರೆಯಲಾಗಿದೆ. ಅಗತ್ಯ ಸೇವೆಗಳ ಇಲಾಖೆಗೆ ಸಂಬಂಧಿಸಿದ ಗೈರುವರ್ಗದ ಮತದಾರರು ನಿಗದಿತ ಅವಯಲ್ಲಿ ಮತ ಚಲಾಯಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
eesanje/url_46_177_3.txt ADDED
@@ -0,0 +1,7 @@
 
 
 
 
 
 
 
 
1
+ 2ನೇ ಹಂತದ ಚುನಾವಣೆ : ನಾಮಪತ್ರ ಸಲ್ಲಿಕೆಗೆ ನಾಳೆ ಕೊನೇದಿನ
2
+ ಬೆಂಗಳೂರು, ಏ.18– ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆಯ ದಿನವಾಗಿದ್ದು, ನಿನ್ನೆಯವರೆಗೆ 168 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
3
+ ಈ ಪೈಕಿ 153 ಪುರುಷ, 15 ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ 20 ಅಭ್ಯರ್ಥಿಗಳಿದ್ದರೆ, ಚಿಕ್ಕೋಡಿ, ಬಿಜಾಪುರ, ಬಳ್ಳಾರಿ ಕ್ಷೇತ್ರದಲ್ಲಿ ತಲಾ 9 ಅಭ್ಯರ್ಥಿಗಳಿದ್ದಾರೆ. ಅತೀ ಕಡಿಮೆ ರಾಯಚೂರು ಜಿಲ್ಲೆಯಲ್ಲಿ 6 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.
4
+ ಉಳಿದಂತೆ ಬೆಳಗಾವಿ 12, ಬಾಗಲಕೋಟೆ 10, ಕಲಬುರಗಿ 10, ಬೀದರ್ 17, ಕೊಪ್ಪಳ 13, ಹಾವೇರಿ 12, ಧಾರವಾಡ 14, ಉತ್ತರಕನ್ನಡ 12, ಶಿವಮೊಗ್ಗ 15 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.
5
+ 89 ಮಂದಿ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಿಜೆಪಿಯಿಂದ 31, ಕಾಂಗ್ರೆಸ್‍ನಿಂದ 40, ಎಎಪಿಯಿಂದ 1 , ಬಿಎಸ್‍ಪಿಯಿಂದ 10, ಜೆಡಿಎಸ್‍ನಿಂದ 1 ನಾಮಪತ್ರ ಸಲ್ಲಿಕೆಯಾಗಿವೆ ಎಂದು ರಾಜ್ಯ ಮುಖ್ಯ ಚುನಾವಣಾಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
6
+ 2ನೇ ಹಂತಕ್ಕೆ ನಾಮಪತ್ರ ಸಲ್ಲಿಕೆ ನಾಳೆ ಕೊನೆಗೊಳ್ಳಲಿದ್ದು, ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ವಾಪಸ್ಸು ಪಡೆಯಲು ಏ.22 ಕಡೆಯ ದಿನವಾಗಿದೆ.
7
+ ಅಂದು ಸಂಜೆ ಆಯಾ ಕ್ಷೇತ್ರಗಳಲ್ಲಿ ಅಂತಿಮ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಅಕೃತವಾಗಿ ಪ್ರಕಟಿಸಲಾಗುತ್ತದೆ. ಮೇ 7 ರಂದು ಮತದಾನ ನಡೆಯಲಿದೆ. ಎರಡೂ ಹಂತಗಳ ಮತ ಎಣಿಕೆ ಜೂನ್ 4 ರಂದು ನಡೆದು, ಅಂದೇ ಫಲಿತಾಂಶ ಹೊರಬೀಳಲಿದೆ.
eesanje/url_46_177_4.txt ADDED
@@ -0,0 +1,7 @@
 
 
 
 
 
 
 
 
1
+ ಮಂಡ್ಯದಲ್ಲಿ ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ಚುನಾವಣಾ ಪ್ರಚಾರ
2
+ ಮಂಡ್ಯ, ಏ.18-ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಉರುಫ್ ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಪ್ರಚಾರ ನಡೆಸಿದ್ದಾರೆ.
3
+ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು, ಟಿ.ಕೆ.ಹಳ್ಳಿ, ಹುಸ್ಕೂರು, ಹಾಡ್ಲಿ ಸರ್ಕಲ್, ಬೆಳಕವಾಡಿ, ಬಿ.ಜಿ.ಪುರ, ಸರಗೂರು ಹ್ಯಾಂಡ್‍ ಪೋಸ್ಟ್, ಪೂರಿಗಾಲಿ, ಟಿ.ಕಾಗೇಪುರ, ದುಗ್ಗನಹಳ್ಳಿ, ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೇರೆ, ಕಿರುಗಾವಲು, ಚನ್ನಪಿಳ್ಳೆ ಕೊಪ್ಪಲು, ಮಳವಳ್ಳಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ದರ್ಶನ್ ರೋಡ್‍ಶೋ ನಡೆಸಿದರು.ಆರಂಭದಲ್ಲಿ ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ ಪಕ್ಷದ ಪರ ಅಲ್ಲ, ವ್ಯಕ್ತಿಯ ಪರ. ತಪ್ಪು ಸಂದೇಶ ಹೋಗಬಾರದು ಎಂದು ಮನವಿ ಮಾಡಿದರು.
4
+ 5 ವರ್ಷಗಳ ಹಿಂದೆ ಪಿ.ಎಂ.ನರೇಂದ್ರಸ್ವಾಮಿಯವರು ಮಾಡಿದ ಸಹಾಯವನ್ನು ಮರೆಯಲು ಆಗುವುದಿಲ್ಲ. ಸುಮಕ್ಕ ಅವರಿಗೆ ಈ ಬಾರಿ ಬಿಜೆಪಿಯ ಟಿಕೆಟ್ ಸಿಗದೇ ಇದ್ದರೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಬೆಂಬಲ ನೀಡಬೇಕು ಎಂದು ಶಾಸಕ ಉದಯ್ ಅವರು ಆರಂಭದಲ್ಲೇ ತಮ್ಮ ಜೊತೆ ಮಾತುಕತೆ ನಡೆಸಿದ್ದರು. ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಪಿ.ಎಂ.ನರೇಂದ್ರ ಸ್ವಾಮಿ ಮತ್ತು ಉದಯ್ ಅವರ ಕೈ ಬಲಪಡಿಸಬೇಕು ಎಂದು ದರ್ಶನ್ ಮನವಿ ಮಾಡಿದರು.
5
+ ಈ ವೇಳೆ ಅಭಿಮಾನಿಗಳು ದರ್ಶನ್ ಅವರಿಗಾಗಿ ಭಾರೀ ಗಾತ್ರದ ಗುಲಾಬಿ ಹಾರವನ್ನು ಹಾಕಲು ಕ್ರೇನ್‍ನಲ್ಲಿ ತಂದಿದ್ದರು. ದರ್ಶನ್ ಅವರ ಭಾಷಣ ಮುಗಿಯುತ್ತಿದ್ದಂತೆ ಕ್ರೇನ್‍ನ ಸಹಾಯದಲ್ಲಿ ನೇತಾಡುತ್ತಿದ್ದ ಹಾರವನ್ನು ಪ್ರಚಾರ ವಾಹನದ ಹತ್ತಿರ ತರುತ್ತಿದ್ದಂತೆ ತೂಕಕ್ಕೆ ಅದು ಅರ್ಧಕ್ಕೆ ತುಂಡರಿಸಿ ಬಿದ್ದಿದೆ. ಬಿದ್ದು ಹೋದ ಹಾರವನ್ನೇ ಎತ್ತಿ ಹಿಡಿದು ಅಭಿಮಾನಿಗಳು ಫೋಟೋ ತೆಗೆಸಿಕೊಂಡರು.
6
+ ರೋಡ್ ಶೋ ಉದ್ದಕ್ಕೂ ಅಲ್ಲಲ್ಲಿ ಭಾಷಣ ಮಾಡಿರುವ ದರ್ಶನ್, ಸ್ಟಾರ್ ಚಂದ್ರು ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು. ಈ ವೇಳೆ ಮಾತನಾಡಿದ ಪಿ.ಎಂ.ನರೇಂದ್ರ ಸ್ವಾಮಿ, ದರ್ಶನ್ ಮಂಡ್ಯದ ಸ್ವಾಭಿಮಾನಕ್ಕೆ ಹೋರಾಟ ನಡೆಸಲು ಧರ್ಮದ ಪರ ನಿಲ್ಲುತ್ತಾರೆ ಎಂದು ಹೇಳಿದರು. ಅಲ್ಲಲ್ಲಿ ಅಭಿಮಾನಿಗಳು ಗಲಾಟೆ ಮಾಡುತ್ತಿದ್ದಾಗ ಆಪರೇಷನ್ ಆಗಿದೆ, ಕೈ ನೋವಿದೆ, ಹಾವಳಿ ಇಡಬೇಡಿ ಎಂದು ಮನವಿ ಮಾಡಿದರು.
7
+ ರೋಡ್‍ಶೋನಲ್ಲಿ ವಿಧಾನಪರಿಷತ್‍ನ ಮಾಜಿ ಸದಸ್ಯ ಮರಿತಿಬ್ಬೇಗೌಡ ಅವರು ಜೊತೆಯಲ್ಲಿದ್ದರು. ಅಭ್ಯರ್ಥಿಯ ಅನುಪಸ್ಥಿತಿಯಲ್ಲಿ ದರ್ಶನ್ ಸ್ಟಾರ್ ಚಂದ್ರು ಪರವಾಗಿ ಬಿರುಸಿನ ಪ್ರಚಾರ ನಡೆಸಿದರು.
eesanje/url_46_177_5.txt ADDED
@@ -0,0 +1,4 @@
 
 
 
 
 
1
+ ಲೋಕಸಭಾ ಚುನಾವಣೆ : ನಾಳೆ ಮೊದಲ ಹಂತದ ಮತದಾನ, ಸಮೀಕ್ಷೆಗಳಿಗೆ ಆಯೋಗ ನಿಷೇಧ
2
+ ಬೆಂಗಳೂರು, ಏ.18-ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ಆರಂಭವಾಗಲಿದ್ದು, ನಾಳೆಯಿಂದ ಕೊನೆಯ ಹಂತದ ಮತದಾನ ಮುಕ್ತಾಯವಾಗುವ ಜೂನ್ 1 ರ ಸಂಜೆ 6.30 ಗಂಟೆಯವರೆಗೂ ಮತಗಟ್ಟೆ ಸಮೀಕ್ಷೆಯನ್ನು ಭಾರತದ ಚುನಾವಣಾ ಆಯೋಗ ನಿಷೇಧಿಸಿದೆ.
3
+ ನಾಳೆ ಬೆಳಿಗ್ಗೆ 7 ಗಂಟೆಯಿಂದ ಜೂನ್ 1 ರ ಸಂಜೆ 6.30 ರ ನಡುವಿನ ಅವಧಿಯಲ್ಲಿ ಯಾವುದೇ ಮಾಧ್ಯಮದಲ್ಲಿ ಮತದಾನಕ್ಕೆ ಸಂಬಂಧಪಟ್ಟ ಅಭಿಪ್ರಾಯದ ಸಮೀಕ್ಷೆಗಳು ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸಮೀಕ್ಷೆಯ ಫಲಿತಾಂಶವನ್ನು ಪ್ರಸಾರ ಮಾಡಲು ಆಯೋಗ ನಿರ್ಬಂಧಿಸಿದೆ.
4
+ ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ರೀತಿಯ ಸಮೀಕ್ಷೆ ಅಥವಾ ಅಭಿಪ್ರಾಯವನ್ನು ರಾಜ್ಯದ ಎಲ್ಲಾ ಎಲೆಕ್ಟ್ರಾನಿಕ್, ಮುದ್ರಣ ಮಾಧ್ಯಮಗಳು ಸೇರಿದಂತೆ ಯಾವುದೇ ರೀತಿಯ ಮಾಧ್ಯಮದಲ್ಲಿ ಪ್ರಸಾರ ಮಾಡದಿರಲು ಸೂಚಿಸಿದೆ.
eesanje/url_46_177_6.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯಾದ್ಯಂತ ಇಂದಿನಿಂದ 2024ನೇ ಸಾಲಿನ ಸಿಇಟಿ ಪರೀಕ್ಷೆ ಆರಂಭ
2
+ ಬೆಂಗಳೂರು, ಏ.18-ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಇಂದು ರಾಜ್ಯಾದ್ಯಂತ ಆರಂಭವಾಯಿತು. ಭಾರೀ ಬಿಗಿಭದ್ರತೆ ಹಾಗೂ ಕಟ್ಟುನಿಟ್ಟಿನ ಕಟ್ಟುನಿಟ್ಟಿನ ಕ್ರಮಗೊಳಿಂದಿಗೆ ಕರ್ನಾಟಕ ಪರೀಕ್ಷಾ ಪ್ರಾಕಾರ ಪರೀಕ್ಷೆ ನಡೆಸುತ್ತಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳು ತಲುಪಿದ್ದು, ಸುಸೂತ್ರವಾಗಿ ಪರೀಕ್ಷೆ ಆರಂಭವಾಗಿದೆ.
3
+ ಈ ತನಕ ಯಾವುದೇ ಗೊಂದಲ ಉಂಟಾಗಿಲ್ಲ ಎಂದು ಕೆಇಎ ಮೂಲಗಳು ತಿಳಿಸಿವೆ. ಕೊನೆಗಳಿಗೆವರೆಗೂ ಕೆಲವೊಂದು ವಿದ್ಯಾರ್ಥಿಗಳು ಪ್ರವೇಶಪತ್ರ ಡೌನ್‍ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿದ್ದರು ಎಂದು ಮೂಲಗಳು ಹೇಳಿವೆ.ಇಂದು ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆದಿವೆ.
4
+ ನಾಳೆ ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏ.20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಮಾತ್ರ ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ.
5
+ ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.ಕರ್ನಾಟಕ ಪರೀಕ್ಷಾ ಪ್ರಾಕಾರದ ಮಾಹಿತಿ ಪ್ರಕಾರ, 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಸೇರ ಬಯಸುವವರು ಸೇರಿದ್ದಾರೆ.
6
+ ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಲ್ಲಿ 3,49,637 ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಿದ್ದಾರೆ.
7
+ 3,18,865 ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಒಟ್ಟು 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹತೆ ಹೊಂದಿದ್ದಾರೆ.ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಡ್ರೈವಿಂಗ್ ಲೈಸೆನ್ಸ್, ಪಾಸ್‍ ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ದ್ವಿತೀಯ ಪಿಯುಸಿ ಪ್ರವೇಶ ಪತ್ರ ಹಾಜರುಪಡಿಸುವ ಷರತ್ತು ವಿಧಿಸಲಾಗಿತ್ತು.
8
+ ಪರೀಕ್ಷಾ ಕೋಠಡಿಗೆ ಯಾವುದೇ ರೀತಿಯ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಸ್ಲೈಡ್ ರೂಲ್ಸ್, ಕ್ಯಾಲ್ಕ್ಯುಲೇಟರ್, ವೈಟ್‍ಫ್ಲ್ಯೂಯಿಡ್, ವೈರ್ಲೆಸ್ ಸೆಟ್ಸ್, ಪೇಪರ್ ಚೀಟಿ, ಬುಕ್ಸ್, ಪುಸ್ತಕ ಮೊದಲಾದವುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವುದನ್ನು ನಿಷೇಸಲಾಗಿತ್ತು.
9
+ ಅಭ್ಯರ್ಥಿಗಳು ಪರೀಕ್ಷೆಯು ಪ್ರಾರಂಭವಾಗುವ ಮೊದಲನೆಯ ಬೆಲ್ ಆಗುವ ಕನಿಷ್ಠಪಕ್ಷ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಿರಬೇಕು. ಮೂರನೇ ಬೆಲ್ ಆದ ನಂತರ ಪರೀಕ್ಷಾ ಕೊಠಡಿ ಪ್ರವೇಶಿಸಲು ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ನು ಮಾತ್ರ ಬಳಸಬೇಕು ಎಂದು ತಿಳಿಸಲಾಗಿತ್ತು.
eesanje/url_46_177_7.txt ADDED
@@ -0,0 +1,5 @@
 
 
 
 
 
 
1
+ ಮನೆಯಿಂದ ಮತದಾನ : ಹಕ್ಕು ಚಲಾಯಿಸಿದ ಶೇ.75.22ರಷ್ಟು ಮಂದಿ
2
+ ಬೆಂಗಳೂರು, ಏ.17-ಪ್ರಸಕ್ತ ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ದಿವ್ಯಾಂಗ ಮತದಾರರು ಶೇ.75.22ರಷ್ಟು ಮತದಾನವನ್ನು ಮನೆಯಿಂದ ಮಾಡಿದ್ದಾರೆ.
3
+ ಮನೆಯಿಂದ ಮತದಾನ ಮಾಡಲು 48,609 ಮತದಾರರು 12 ಡಿ ನಮೂನೆಯನ್ನು ಸಲ್ಲಿಸಿದ್ದರು. ಅವರಲ್ಲಿ ನಿನ್ನೆಯವರೆಗೆ 36,565 ಮತದಾರರು ಮನೆಯಿಂದ ಮತ ಚಲಾಯಿಸಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
4
+ 85 ವರ್ಷಕ್ಕಿಂತ ಮೇಲ್ಪಟ್ಟ 27,505 ಮತದಾರರು ಅಂದರೆ ಶೇ.74.97ರಷ್ಟು ಹಿರಿಯ ಮತದಾರರು ಮನೆಯಿಂದ ಮತ ಚಲಾಯಿಸಿದ್ದಾರೆ. 36,689 ಮತದಾರರಿಗೆ ಮನೆಯಿಂದ ಮತದಾನ ಮಾಡಲು ಅನುಮೋದಿಸಲಾಗಿದೆ. ಅದೇ ರೀತಿ ಶೇ. 40ಕ್ಕಿಂತ ಹೆಚ್ಚಿನ ದಿವ್ಯಾಂಗ ಮತದಾರರು ಮನೆಯಿಂದ ಮತ ಚಲಾಯಿಸಿದ್ದಾರೆ.
5
+ 9,060 ಮತದಾರರು ಮತದಾನ ಮಾಡಿದ್ದಾರೆ. ಅಂದರೆ ಶೇ.76.01ರಷ್ಟು ಮತದಾನ ಮಾಡಿದ್ದಾರೆ. 11,920 ದಿವ್ಯಾಂಗ ಮತದಾರರಿಗೆ ಮನೆಯಿಂದ ಮತದಾನ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.ಏಪ್ರಿಲ್ 13ರಿಂದ ಮನೆಯಿಂದ ಮತದಾನ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ನಾಳೆ ಮನೆಯಿಂದ ಮತದಾನ ಮಾಡಲು ಕಡೆಯ ದಿನವಾಗಿದೆ.
eesanje/url_46_177_8.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ವಿಜಯೇಂದ್ರನನ್ನ ಸಿಎಂ ಮಾಡಲು ಯಡಿಯೂರಪ್ಪ ತಂತ್ರ : ಸಿಎಂ ಟೀಕಾ ಪ್ರಹಾರ
2
+ ಬೆಂಗಳೂರು, ಏ.17-ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಇಂದು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕರಡಿ ಸಂಗಣ್ಣ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಇದೇ ವೇಳೆ ಬೆಳಗಾವಿ ಗ್ರಾಮಾಂತರದಲ್ಲಿ ಮೂರು ಬಾರಿ ಮಾಜಿ ಶಾಸಕರಾಗಿದ್ದ ಎಸ್.ಸಿ. ಮಾಳಗಿ, ಮಾಜಿ ಐಎಎಸ್ ಅಧಿಕಾರಿ ಅರಕಲಗೂಡು ಪುಟ್ಟಸ್ವಾಮಿ, ಅಂಬರೀಶ್ ಕರಡಿ, ರಾಜಾಜಿನಗರ ಕ್ಷೇತ್ರ ಹಾಗೂ ದಾಸರಹಳ್ಳಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಪಿ.ಎನ್.ಕೃಷ್ಣ ಮೂರ್ತಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್ ಅವರು ಕಾಂಗ್ರೆಸ್ಗೆ ಸೇರ್ಪಡೆಯಾದರು.
3
+ ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಕರಡಿ ಸಂಗಣ್ಣವರಿಗೆ ಯಾಕೆ ಟಿಕೆಟ್ ನಿರಾಕರಿಸಿದರು ಎಂದು ಈವರೆಗೂ ನನಗೆ ಅರ್ಥವಾಗಿಲ್ಲ. ಅವರು ಒಳ್ಳೆಯ ಕೆಲಸ ಮಾಡಿ ಹೆಸರು ಗಳಿಸಿದ್ದರು, ಜನಾನುರಾಗಿಯಾಗಿದ್ದರು. ಯಡಿಯೂರಪ್ಪ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಬೇಕು. ಅದಕ್ಕಾಗಿ ಬಿಜೆಪಿಯಲ್ಲಿ ಯಾರು ವಿಜಯೇಂದ್ರನನ್ನು ಒಪ್ಪಿಕೊಳ್ಳುವುದಿಲ್ಲ, ಅವರಿಗೆಲ್ಲಾ ಈ ಬಾರಿ ಯಡಿಯೂರಪ್ಪ ಟಿಕೆಟ್ ತಪ್ಪಿಸಿದ್ದಾರೆ. ಅಲ್ಲಿ ಎರಡು ಪ್ರಬಲ ಗುಂಪುಗಳಿವೆ, ಒಂದು ಯಡಿಯೂರಪ್ಪನ ಗುಂಪು, ಮತ್ತೊಂದು ಸಂತೋಷ್ ಗುಂಪು ಎಂದು ಹೇಳಿದರು.
4
+ ಕಳೆದ ಬಾರಿ 25 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈ ಬಾರಿ ಸೋಲುವ ಆತಂಕ ಇದೆ. ಅದಕ್ಕಾಗಿ ಅನೇಕ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರಕ್ಕೆ ದೇಶಾದ್ಯಂತ ಆಡಳಿತ ವಿರೋಧಿ ಅಲೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ನಮ್ಮ ಐದು ಗ್ಯಾರಂಟಿಗಳ ಅಲೆ ರಾಜ್ಯದಲ್ಲಿ ಜೋರಾಗಿದೆ ಎಂದರು.
5
+ ಜನರಿಗೆ ಕಾಂಗ್ರೆಸ್ ಬಗ್ಗೆ ವಿಶ್ವಾಸ ಮೂಡಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂಬ ಭಾವನೆ ಇದೆ. ದೇಶದಲ್ಲಿ ಸುಳ್ಳು ಮತ್ತು ಸತ್ಯದ ನಡುವೆ ಸಂಘರ್ಷ ನಡೆಯುತ್ತಿದೆ. ಕಾಂಗ್ರೆಸ್ ಯಾವತ್ತೂ ಸುಳ್ಳು ಹೇಳುವುದಿಲ್ಲ ಎಂಬ ನಂಬಿಕೆಯಿದ್ದರೆ, ಬಿಜೆಪಿ ಎಂದರೆ ನರೇಂದ್ರ ಮೋದಿಯಾದಿಯಾಗಿ ಎಲ್ಲರೂ ಸುಳ್ಳು ಹೇಳುತ್ತಾರೆ ಎಂಬ ಭಾವನೆ ದೃಢವಾಗಿದೆ.
6
+ ಮೋದಿ 2014ರ ಲೋಕಸಭೆ ಚುನಾವಣೆಯಲ್ಲಿ ನೀಡಿದ್ದ ಯಾವ ಭರವಸೆಗಳನ್ನೂ ಈಡೇರಿಸಲಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ತಂದುಕೊಡುತ್ತೇವೆ ಎಂದಿದ್ದರು ಅದು ಈಡೇರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡುವುದು ಈಡೇರಿಲ್ಲ. ಒಳ್ಳೆಯ ದಿನ ಬರಲಿಲ್ಲ. ನಿರುದ್ಯೋಗ ಗಗನ ಮುಟ್ಟಿದೆ, ಬೆಲೆ ಏರಿಕೆ ತೀವ್ರವಾಗಿದೆ. ಹೀಗೆ ಜನರ ���ಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ನರೇಂದ್ರ ಮೋದಿ ಪ್ರಸ್ತಾಪಿಸುವುದಿಲ್ಲ.
7
+ ಧಾರ್ಮಿಕ ಹಾಗೂ ಭಾವನಾತ್ಮಕ ವಿಚಾರಗಳನ್ನು ಹೇಳಿ ಈವರೆಗೂ ಜನರನ್ನು ದಾರಿ ತಪ್ಪಿಸಿದ್ದಾರೆ. ಈ ಬಾರಿ ಅದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ ಎಂದರು. ಸೋಲಿನ ಅರಿವಾಗುತ್ತಿದ್ದಂತೆ ಬಿಜೆಪಿಯವರು ಉದ್ದೇಶ ಪೂರ್ವಕವಾಗಿ ನಾಲ್ಕು ನೂರು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ, ಅವರೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲೂ ಹಿನ್ನಡೆ ಸ್ಪಷ್ಟವಾಗಿದೆ. ಈ ಬಾರಿ ಬಿಜೆಪಿ ಗೆಲ್ಲಲ್ಲ, ನರೇಂದ್ರ ಮೋದಿ ಪ್ರಧಾನಿಯಾಗಲ್ಲ. ದೇಶಾದ್ಯಂತ ಈ ರೀತಿಯ ಅಂಡರ್ ಕರೆಂಟ್ ಇದೆ ಎಂದರು.
8
+ ಗೆಲ್ಲುವ ವಾತಾವರಣ:ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ದೊಡ್ಡ ರಾಜಕೀಯ ಅಲೆ ಶುರುವಾಗಿದೆ. ಐದು ಗ್ಯಾರಂಟಿ ಜಾರಿಯ ಬಳಿಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದುಕೊಳ್ಳಲಿದೆ ಎಂಬ ವಿಶ್ವಾಸ ಜನರಲ್ಲಿ ಹೆಚ್ಚಾಗಿದೆ. ತಾವು ನಿನ್ನೆ ಕೇರಳದಲ್ಲಿ ಪ್ರವಾಸ ಕೈಗೊಂಡಿದ್ದು, ಅಲ್ಲಿ 20ಕ್ಕೆ 20 ಸ್ಥಾನಗಳನ್ನೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಗೆಲ್ಲುವ ವಾತಾರಣ ಇದೆ ಎಂದರು.
9
+ ಬಿಜೆಪಿಯಲ್ಲಿ 16 ಮಂದಿ ಬಿಜೆಪಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ, ದೇಶದಲ್ಲಿ ನೂರಕ್ಕೂ ಹೆಚ್ಚು ಮಂದಿಯ ಮರು ಸ್ಪರ್ಧೆಗೆ ಟಿಕೆಟ್ ನೀಡಿಲ್ಲ. ಅವರು ಮತ್ತೆ ಗೆಲ್ಲುವುದಿಲ್ಲ ಎಂಬ ಕಾರಣಕ್ಕೆ ಟಿಕೆಟ್ ನಿರಾಕರಿಸಲಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎಗೆ ಸೋಲಿನ ಭಯ ಕಾಡುತ್ತಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದ ಏಕತೆ ಜನರಲ್ಲಿ ವಿಶ್ವಾಸ ಹೆಚ್ಚಿಸಿದೆ. ಬೆಲೆ ಏರಿಕೆ, ಜಾತಿ- ಧರ್ಮದ ಮೇಲಿನ ದಾಳಿ ಕುರಿತು ಚುನಾವಣೆ ಸಂದರ್ಭದಲ್ಲಿ ಚರ್ಚೆ ನಡೆಯುತ್ತಿದೆ.
10
+ ಸಂವಿಧಾನ ಬದಲಾವಣೆ ಮಾಡುವುದಿಲ್ಲಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. ಹಾಲಿ ಸಂಸದರು ಬಿಜೆಪಿಗೆ ನಾಲ್ಕು ನೂರು ಸ್ಥಾನ ಗೆಲ್ಲಿಸಿ ಕೊಡಿ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಿದ್ದಾರೆ. ಈವರೆಗೂ ಅಂತಹ ಸಂಸದರ ವಿರುದ್ಧ ಕ್ರಮ ಕೈಗೊಂಡಿಲ್ಲ. ಉತ್ತರ ಭಾರತದಲ್ಲಿ ಜನ ದಂಗೆ ಏಳುತ್ತಾರೆ ಎಂದು ಮೋದಿ ಸ್ಪಷ್ಟನೆ ನೀಡಿದ್ದಾರೆ ಎಂದರು.
11
+ ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಕರ್ನಾಟಕ ಮತ್ತು ತೆಲಂಗಾಣದಲ್ಲಿ ಸಂಪೂರ್ಣವಾಗಿ ಜಾರಿಗೆ ತಂದಿದ್ದೇವೆ. ನಮ್ಮ ಗ್ಯಾರಂಟಿಗಳನ್ನು ಟೀಕೆ ಮಾಡುತ್ತಿದ್ದವರು ಈಗ ಮೋದಿ ಗ್ಯಾರಂಟಿ ಎಂದು ಜಾಹೀರಾತು ನೀಡಲಾರಂಭಿಸಿದ್ದಾರೆ. ಬಿಜೆಪಿ ಹಿಂದೆ ನೀಡಿದ್ದ ಭರವಸೆಗಳನ್ನು ಎಷ್ಟು ಈಡೇರಿಸಿದ್ದಾರೆ ಎಂದು ಚರ್ಚಿಸಬೇಕಿದೆ. ಮೋದಿ ಗ್ಯಾರಂಟಿ ಎಷ್ಟು ತಲುಪಿದೆ ಎಂಬುದು ಜನರೇ ಹೇಳಬೇಕಿದೆ ಎಂದರು.
12
+ ಚುನಾವಣೆ ಬಳಿಕ ಗ್ಯಾರಂಟಿ ಮುಂದುವರೆಯುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅಂದರೆ ಎನ್ಡಿಎ ಅಧಿಕಾರಕ್���ೆ ಬಂದರೆ ಅವರು ಗ್ಯಾರಂಟಿಯನ್ನು ಮುಂದುವರೆಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಬಿಜೆಪಿಯ ನಾಯಕರಿಗೆ ಅವರ ಹಣೆಯ ಬರಹದಲ್ಲಿ ಗ್ಯಾರಂಟಿ ಮುಟ್ಟಲು ಸಾಧ್ಯವಿಲ್ಲ, ಅದಕ್ಕೆ ರಾಜ್ಯದ ಜನ ಮತ್ತು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಎಚ್ಚರಿಸಿದರು.
13
+ ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಇದು ಖಚಿತವಾಗುತ್ತಿದ್ದಂತೆ ಹತಾಶರಾಗಿ ಕುಮಾರಸ್ವಾಮಿ ಗ್ಯಾರಂಟಿಗಳಿಂದ ಹಳ್ಳಿಯಲ್ಲಿ ತಾಯಂದಿರು ದಾರಿ ತಪ್ಪಿದರು ಎಂದು ಹೇಳಿಕೆ ನೀಡಿದ್ದಾರೆ ಎಂದು ಲೇವಡಿ ಮಾಡಿದರು.ರಾಜ್ಯದಲ್ಲಿ ಎಲ್ಲ ಕಡೆ ಕಾಂಗ್ರೆಸ್ ಗೆಲ್ಲಲಿದೆ. ಶಿವಮೊಗ್ಗದಲ್ಲಿ ಪಕ್ಷ ಭೇದ ಮರೆತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ರನ್ನು ಬೆಂಬಲಿಸುತ್ತಿದ್ದಾರೆ. ಯಡಿಯೂರಪ್ಪನವರ ಮಗ ಈ ಬಾರಿ ಅಲ್ಲಿ ಗೆಲ್ಲುವುದಿಲ್ಲ . ವಿಧಾನಸಭಾ ಚುನಾವಣೆಯಲ್ಲಿ ಗಾಂಬಾವಿಯಿಂದ ನೀರು ತೆಗೆದು ರಸ್ತೆ ತೊಳೆದೆವು, ಅದೇ ರೀತಿ ಬಿಜೆಪಿಯನ್ನು ತೊಳೆಯುತ್ತೇವೆ, ಜನ ಬಿಜೆಪಿಯನ್ನು ನಿರಾಕರಿಸುತ್ತಾರೆ ಎಂದರು.
14
+ ಬಿಜೆಪಿಯ ಸಂಸದ ಕರಡಿ ಸಂಗಣ್ಣ ಸಜ್ಜನ ರಾಜಕಾರಣಿ, ಅವರನ್ನು ಆ ಪಕ್ಷದಲ್ಲಿ ಅಪಮಾನಿಸಲಾಗಿದೆ, ಹಾಲಿ ಸಂಸದರಾಗಿರುವ ಅವರು ನಿನ್ನೆ ತಮ್ಮ ಸ್ಥಾನಕ್ಕೆ ಫ್ಯಾಕ್ಸ್ ಮೂಲಕ ರಾಜೀನಾಮೆ ನೀಡಿ, ಇಂದು ಕಾಂಗ್ರೆಸ್ ಸೇರಿದ್ದಾರೆ. ಈ ಬೆಳವಣಿಗೆಗಳು ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಹೆಚ್ಚಿರುವುದನ್ನು ಸ್ಪಷ್ಟ ಪಡಿಸಿವೆ. ಕರಡಿ ಸಂಗಣ್ಣ, ಪರಿಶುದ್ಧ ವ್ಯಕ್ತಿತ್ವ ಹಾಗೂ ದೊಡ್ಡ ಪ್ರಮಾಣದ ಬೆಂಬಲಿಗರನ್ನು ಹೊಂದಿರುವವರು, ಕೊಪ್ಪಳ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪ್ರಭಾವಿಯಾಗಿದ್ದಾರೆ ಎಂದರು.
15
+ ಸಂಸದ ಕರಡಿ ಸಂಗಣ್ಣ ಮಾತನಾಡಿ, 14 ವರ್ಷಗಳ ಹಿಂದೆ ಲಕ್ಷ್ಮಣ್ ಸವದಿ ಸಚಿವರಾಗಿದ್ದರು, ಆ ವೇಳೆ ನಾನು ಹೋರಾಟ ನಡೆಸುತ್ತಿದ್ದೆ, ನನ್ನನ್ನು ಭೇಟಿ ಮಾಡಿದ ಸವದಿ ನಿನಗೆ ಹೋರಾಟ ಬೇಕೋ, ಅಭಿವೃದ್ಧಿ ಬೇಕೋ ಎಂದರು. ಅಭಿವೃದ್ಧಿ ಬೇಕು ಎಂದಾಗ ನನ್ನ ಜೊತೆ ಬಾ ಎಂದು ಬಿಜೆಪಿಗೆ ಕರೆದುಕೊಂಡು ಹೋದರು. ಕಾಕತಾಳೀಯ ಎಂಬಂತೆ ಇಂದು ಕಾಂಗ್ರೆಸ್ಗೆ ಬರಲು ಸವದಿ ಅವರೇ ಪ್ರಮುಖ ಕಾರಣ. ಕಾಂಗ್ರೆಸ್ನ ಹೆಚ್.ಜಿ.ರಾಮುಲು ನನಗೆ ರಾಜಕೀಯ ಗುರು,1978ರಲ್ಲಿ ತಾಲ್ಲೂಕು ಬೋರ್ಡ್ ಸದಸ್ಯರಾಗಲು ಬಿ-ಫಾರಂ ಕೊಟ್ಟಿದ್ದರು. ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತ ಮೆಚ್ಚಿ ಇಂದು ಪಕ್ಷ ಸೇರಿದ್ದೇನೆ. ನನ್ನೊಂದಿಗೆ ಅನೇಕರು ಪಕ್ಷ ಸೇರಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ರನ್ನು ಗೆಲ್ಲಿಸುವ ಸವಾಲನ್ನು ನಾವು ತೆಗೆದುಕೊಂಡಿದ್ದೇವೆ ಎಂದರು.
16
+ ನನಗೆ ವೈಯಕ್ತಿಕ ಲಾಭದ ಆಸೆ ಇಲ್ಲ, ಎರಡು ಜಿಲ್ಲೆಗಳ ಅಭಿವೃದ್ಧಿಗೆ ಸಹಕಾರ ನೀಡಿ. ತಾಲ್ಲೂಕು ಬೋರ್ಡ್ ಸದಸ್ಯತ್ವದಿಂದ, ನಾಲ್ಕು ಬಾರಿ ಶಾಸಕನಾಗಿ, ಸಂಸದನಾಗಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಣೆ ಮ���ಡಿದ್ದೇನೆ ಎಂದು ಹೇಳಿದರು.ಸಚಿವ ಶಿವರಾಜ ತಂಗಡಗಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಲಕ್ಷ್ಮಣ ಸವದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
eesanje/url_46_177_9.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಿಜೆಪಿ ಶ್ರೀಮಂತರ ಪಕ್ಷ, ಬಡವರ ಬಗ್ಗೆ ಕಾಳಜಿ ಇಲ್ಲ : ರಾಹುಲ್ ಗಾಂಧಿ
2
+ ಮಂಡ್ಯ, ಏ.17- ಬಿಜೆಪಿ ಶ್ರೀಮಂತರ ಪರವಾಗಿ ಮಾತ್ರ ಯೋಚಿಸುತ್ತಿದ್ದು, ಬಡವರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ ಭರವಸೆ ನೀಡಿದ್ದಾರೆ.
3
+ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ 2 ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಬಿಜೆಪಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆದಿದ್ದರು. ದೇಶದ ಸಂಪತ್ತು ಕೆಲವೇ ಕೆಲವು ವ್ಯಕ್ತಿಗಳ ಬಳಿಕ ಕ್ರೋಢಿಕರಣಗೊಳ್ಳುತ್ತಿದೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳು ಹಣ ಇರುವವರಿಗೆ ಪೂರಕವಾಗಿವೆ. ಜನ ಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಅದರ ಮೇಲೆ ಅವೈಜ್ಞಾನಿಕವಾದ ತೆರಿಗೆ ಪದ್ಧತಿಯಿಂದ ಮತ್ತಷ್ಟು ಭಾರ ಹೊರಿಸಲಾಗಿದೆ ಎಂದು ಟೀಕಿಸಿದರು.
4
+ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಅವೈಜ್ಞಾನಿಕವಾದ ಜಿಎಸ್‍ಟಿ ಪದ್ಧತಿಯನ್ನು ಪರಿಷ್ಕರಣೆ ಮಾಡಲಾಗುವುದು, ಆಹಾರ ಪದಾರ್ಥಗಳ ಮೇಲೆ ತೆರಿಗೆ ಹೊರೆಯನ್ನು ತೆಗೆದು ಹಾಕಲಾಗುವುದು, ಸ್ವಾಮೀನಾಥನ್ ವರದಿ ಅನುಸಾರ ವೈಜ್ಞಾನಿಕವಾದ ಬೆಂಬಲ ಬೆಲೆ ನಿಗದಿಯೊಂದಿಗೆ, ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದರು.
5
+ ಪ್ರತಿಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವಿನ ಮಹಿಳಾ ನ್ಯಾಯ, ಪ್ರತಿಯೊಬ್ಬ ವಿದ್ಯಾವಂತ ಯುವಕನಿಧಿಗೆ ಮೊದಲ ಉದ್ಯೋಗದ ಗ್ಯಾರಂಟಿಯೊಂದಿಗೆ ಒಂದು ಲಕ್ಷ ರೂಪಾಯಿ ವೇತನ, ಜಾತಿ ಜನಗಣತಿಯ ಮೂಲಕ ಸಾಮಾಜಿಕ ನ್ಯಾಯ ಜಾರಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ದಿನಗೂಲಿಯನ್ನು 400 ರೂಪಾಯಿಗೆ ಏರಿಕೆ ಸೇರಿದಂತೆ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಜಾರಿಗೆ ತರಲಿದೆ ಎಂದು ವಿವರಿಸಿದರು.
6
+ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನಾ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿದೆ. ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ. ಜನರನ್ನು ದಿಕ್ಕು ತಪ್ಪಿಸುವ ಭರವಸೆಗಳನ್ನು ನೀಡುವುದಿಲ್ಲ, ಭರವಸೆ ನೀಡಿದ ಮೇಲೆ ಅದನ್ನು ತಪ್ಪದೆ ಈಡೇರಿಸುತ್ತೇವೆ ಎಂದು ಹೇಳಿದರು.
7
+ ಆದರೆ ಬಿಜೆಪಿ ನುಡಿದಂತೆ ನಡೆಯುವುದಿಲ್ಲ, ಚುನಾವಣೆ ಕಾಲದಲ್ಲಿ ಜನರನ್ನು ಭಾವನಾತ್ಮಕವಾಗಿ ದಿಕ್ಕು ತಪ್ಪಿಸಿ ಮತ ಗಿಟ್ಟಿಸುವ ಪ್ರಯತ್ನ ನಡೆಸುತ್ತದೆ. ನಂತರ ಅಧಿಕಾರಾವಧಿಯ ಉದ್ದಕ್ಕೂ ಒಂದಲ್ಲ ಒಂದು ಸಮಸ್ಯೆಗಳಿಂದ ಜನ ನರಳುವಂತಾಗುತ್ತದೆ. ಈ ಹಿಂದೆ ನೋಟು ಅಮಾನ್ಯ, ಜನರಿಗೆ ಹೊರೆಯಾಗುವ ತೆರಿಗೆ ಪದ್ಧತಿ ಸೇರಿದಂತೆ ಅನೇಕ ಆರ್ಥಿಕ ಸಮಸ್ಯೆಗಳನ್ನು ಮೋದಿ ಸರ್ಕಾರ ಸೃಷ್ಟಿಸಿದೆ ಎಂದು ಟೀಕಿಸಿದರು.
8
+ ಚುನಾವಣಾ ಬಾಂಡ್ ವಿಚಾರದಲ್ಲಿ ಈವರೆಗೂ ಪ್ರಧಾನಿ ಮೌನವಾಗಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಸಿಬಿಐಗಳನ್ನು ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‍ಗಳನ್ನು ಮಾರಾಟ ಮಾಡಲಾಗಿದೆ. ಗುತ್ತಿಗೆ ನೀಡಿದ್ದಕ್ಕೆ ಪ್ರತಿಯಾಗಿ ಬಾಂಡ್‍ಗಳನ್ನು ಖರೀದಿಸುವಂತೆ ಮಾಡಲಾಗಿದೆ. ಇದು ಸ್ಪಷ್ಟವಾದ ಭ್ರಷ್ಟಚಾರ ಪ್ರಕರಣವಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
9
+ ಬಿಜೆಪಿಯ ಅನೇಕ ಸಂಸದರು, ಪ್ರಮುಖರು ಸಂವಿಧಾನ ಬದಲಾವಣೆಯ ಕುರಿತು ಹೇಳಿಕೆ ನೀಡಿದ್ದಾರೆ. ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಅಪಾಯವಿದೆ. ಈಗಾಗಲೇ ಪ್ರಜಾಪ್ರಭುತ್ವವನ್ನು ಧಿಕ್ಕರಿಸಿ ಮೋದಿ ಸರ್ಕಾರ ಸಾಕಷ್ಟು ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
10
+ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ಉದಯ, ಗಣಿಗ ರವಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು.
eesanje/url_46_178_1.txt ADDED
@@ -0,0 +1,4 @@
 
 
 
 
 
1
+ ಹುಬ್ಬಳ್ಳಿ : ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 2 ಕೋಟಿ ಹಣ ಜಪ್ತಿ
2
+ ಹುಬ್ಬಳ್ಳಿ, ಏ.16-ಐಟಿ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ಹಿನ್ನೆಲೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಮನೆಯಲ್ಲಿ ಬರೋಬ್ಬರಿ 2 ಕೋಟಿ ರೂ. ಗೂ ಹೆಚ್ಚು ನಗದು ಜಪ್ತಿ ಮಾಡಲಾಗಿದೆ. ನಿಂಗಪ್ಪ ಜಟಾದ್ ಎಂಬುವವರ ಮನೆಯಲ್ಲಿ ಮತದಾರರಿಗೆ ಹಂಚಲು 2 ಕೋಟಿ ರೂ. ಹೆಚ್ಚು ನಗದು ಸಂಗ್ರಹಿಸಲಾಗಿತ್ತು ಎನ್ನಲಾಗಿದ್ದು, ಈ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
3
+ ಮತ್ತೊಂದು ಪ್ರಕರಣದಲ್ಲಿ ಚುನಾವಣಾ ನೀತಿ ಸಂಹಿತೆ ಹಾಗೂ ಅಬಕಾರಿ ನಿಯಮ ಉಲ್ಲಂಸಿದ ಹಿನ್ನೆಲೆಯಲ್ಲಿ ಲಾರಿಯಲ್ಲಿದ್ದ 16 ಲಕ್ಷ ರೂ. ಮೌಲ್ಯದ 9420 ಲೀಟರ್ ಬಿಯರ್ ಜಪ್ತಿ ಮಾಡಲಾಗಿದೆ. ಕೆಎಸ್ಬಿಸಿಎಲ್ ಡೀಪೊದಲ್ಲಿ ಲಾರಿಯೊಂದರಲ್ಲಿ ಇದ್ದ 650/500 ಎಂಎಲ್ನ 1100 ಬಿಯರ್ ಬಾಕ್ಸ್ಗಳನ್ನು ವಶಕ್ಕೆ ಪಡೆಯಲಾಗಿದೆ.
4
+ ಬಾಗಲಕೋಟೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ದಾಳಿ ಮಾಡಿದ್ದು, ಮದ್ಯ ಮತ್ತು ಮದ್ಯಸಾರ ಸಾಗಿಸುವ ವಾಹನಗಳಿಗೆ ಜಿ.ಪಿ.ಎಸ್ ಉಪಕರಣ ಅಳವಡಿಸದೇ ಸುತ್ತೋಲೆ ಉಲ್ಲಂಸಿರುವ ಕಾರಣ ವಾಹನ ಸಮೇತ ಮದ್ಯ ವಶಕ್ಕೆ ಪಡೆಯಲಾಗಿದೆ.
eesanje/url_46_178_10.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಬರ ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗದ ಅನುಮತಿ ಕೇಳಲಾಗಿದೆ : ಜೈಶಂಕರ್
2
+ ಬೆಂಗಳೂರು,ಏ.15-ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ() ಅಡಿ ಕೇಂದ್ರದಿಂದ ಬರಪರಿಹಾರ ಬಿಡುಗಡೆ ಮಾಡುವ ಬಗ್ಗೆ ಚುನಾವಣಾ ಆಯೋಗದ ಅನುಮತಿ ಕೇಳಲಾಗಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಹೇಳಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಎನ್ಡಿಆರ್ಎಫ್ನಡಿ ಪರಿಹಾರ ಬಿಡುಗಡೆ ಮಾಡಲು ಅದರದ್ದೇ ಆದ ನೀತಿನಿಯಮಗಳಿವೆ. ನಾವು ಚುನಾವಣಾ ಆಯೋಗಕ್ಕೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದೇವೆ. ಚೆಂಡು ಆಯೋಗದ ಅಂಗಳದಲ್ಲಿದೆ ಎಂದರು. ಕರ್ನಾಟಕ ಮಾತ್ರವಲ್ಲದೇ ಅನೇಕ ರಾಜ್ಯಗಳು ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
4
+ ಯಾವ ರಾಜ್ಯಗಳಿಗೂ ನಾವು ತಾರತಮ್ಯ ಎಸಗದೆ ಕಾನೂನಿನಡಿ ಎಷ್ಟು ಬಿಡುಗಡೆ ಮಾಡಬೇಕೋ ಅಷ್ಟು ಹಣವನ್ನು ಬಿಡುಗಡೆ ಮಾಡಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲೇ ಬಿಜೆಪಿ ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿದೆ.
5
+ ಈ ಬಾರಿ ದೇಶದ ಎಲ್ಲಿಯೂ ಆಡಳಿತ ವಿರೋಧಿ ಅಲೆ ಕಾಣುತ್ತಿಲ್ಲ. ಮೋದಿಯವರ ಆಡಳಿತಕ್ಕೆ ದೇಶದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಹೀಗಾಗಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
6
+ 300 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಈ ಬಾರಿ 400 ಸ್ಥಾನಗಳನ್ನು ಗೆಲ್ಲುವುದು ದುಸ್ಸಾಹಸದ ಮಾತಲ್ಲ. ಏಕೆಂದರೆ ಆಡಳಿತ ಪಕ್ಷಕ್ಕೆ ವಿರೋಧಿ ಅಲೆ ಇದ್ದರೆ ನಮಗೆ ಹಿನ್ನಡೆಯಾಗಬಹುದು ಎನ್ನಲಾಗುತ್ತಿತ್ತು. ಇಡೀ ಭಾರತೀಯರೇ ಮೋದಿ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದು, ಮತ್ತೆ ಅಧಿಕಾರ ಕೊಡಲು ಸಿದ್ದರಾಗಿದ್ದಾರೆ ಎಂದರು.
7
+ ನಾವೆಲ್ಲರೂ ಮತ್ತೊಮ್ಮೆ ಮೋದಿಯವರ ಕೈ ಬಲಪಡಿಸಬೇಕಾದ ಅಗತ್ಯವಿದೆ. ಬಿಜೆಪಿಯ ಸಂಕಲ್ಪ ಪತ್ರ ಬಿಡುಗಡೆಯಾಗಿದೆ. ನಮ್ಮ ಹತ್ತು ವರ್ಷಗಳ ಸಾಧನೆ ಜನರ ಮುಂದಿದೆ. ಮುಂದಿನ ಐದು ವರ್ಷಗಳ ಭರವಸೆಗಳು ಇದರಲ್ಲಿವೆ. ವಿಕಸಿತ ಭಾರತ ಬಗ್ಗೆ ಮೋದಿ ಗ್ಯಾರಂಟಿ ಬಗ್ಗೆ ಹೇಳಿದ್ದೇವೆ ಎಂದರು. ಹತ್ತು ವರ್ಷಗಳ ಹಿಂದೆ ಹದಗೆಟ್ಟ ಆರ್ಥಿಕತೆ ದೇಶದಲ್ಲಿ ಇತ್ತು.
8
+ , .://./
9
+ ಇವತ್ತು ದೇಶದ ಆರ್ಥಿಕತೆ ಸೂಕ್ತವಾಗಿದೆ. ಎಲ್ಲ ವರ್ಗಗಳ ವಿಕಾಸಕ್ಕೆ ನಮ್ಮ ಸರ್ಕಾರ ಒತ್ತು ಕೊಟ್ಟಿದೆ. ಕಳೆದ ಹತ್ತು ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡರು. ನಮ್ಮ ದೇಶದಲ್ಲೇ ಮೊದಲು ಕೊರೋನಾ ಲಸಿಕೆ ಬಂತು. ಕೋವಿಡ್ ನಂತರ ಆರ್ಥಿಕತೆ ಚೇತರಿಕೆಗೆ ಹಲವು ಸುಧಾರಣೆ ಕ್ರಮ ಕೈಗೊಳ್ಳಲಾಗಿದೆ.
10
+ ವರ್ಷಕ್ಕೆ ಸರಾಸರಿ 08 ವಿಮಾನ ನಿಲ್ದಾಣಗಳ ನಿರ್ಮಾಣ, ಮೂಲಭೂತ ಸೌಕರ್ಯಗಳ ವೃದ್��ಿ, ಭಯೋತ್ಪಾದನೆ ಚಟುವಟಿಕೆಗಳ ನಿಗ್ರಹಕ್ಕೆ ಕಠಿಣ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ 80 ಕೋಟಿ ಜನ ಫಲಾನುಭವಿಗಳಾಗಿದ್ದಾರೆ. ಈ ಯೋಜನೆ ಮುಂದಿನ ಐದು ವರ್ಷವೂ ಮುಂದುವರೆಯಲಿದೆ.
11
+ ಆವಾಸ್ ಯೋಜನೆಯಲ್ಲಿ ಮುಂದಿನ ಐದು ವರ್ಷ ಮೂರು ಕೋಟಿ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಹಿರಿಯರಿಗೆ ಆಯುಷ್ಮಾನ್ ಭಾರತ್ ವಿಸ್ತರಣೆ, ವಿಪುಲ ಉದ್ಯೋಗಾವಕಾಶ, ಮುದ್ರಾ ಯೋಜನೆಯನ್ನು ಸ್ಟಾರ್ಟಪ್ಗಳಿಗೂ ವಿಸ್ತರಣೆ, ಸುರಕ್ಷಿತ್ ಭಾರತ, ಭಯೋತ್ಪಾದನೆಗೆ ತಡೆ, ಗಡಿಗಳ ರಕ್ಷಣೆಗೆ ಬದ್ದವಾಗಿದ್ದು, ಮುಂದಿನ ವರ್ಷಗಳಲ್ಲಿ ಭಾರತವನ್ನು ಮೂರನೇ ಆರ್ಥಿಕ ದೇಶವಾಗಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.
12
+ ನಮ್ಮ ಮುಂದೆ ಸೈಬರ್ ಅಪರಾಧಗಳ ಸವಾಲಿದೆ, ದಿಟ್ಟವಾಗಿ ಎದುರಿಸುತ್ತಿದ್ದೇವೆ. ಬೆಂಗಳೂರಿಗೆ ಸಬರ್ಬನ್ ರೈಲು ಯೋಜನೆ, ಏರ್ಪೊೀರ್ಟ್ ಎರಡನೇ ಟರ್ಮಿನಲ್ ನಿರ್ಮಾಣ, ಐಟಿಬಿಟಿ ಕಂಪೆನಿಗಳಿಗೆ ಬಲ ತುಂಬುವ ಕೆಲಸವಾಗಿದೆ ಎಂದು ಹೇಳಿದರು. ಹೆಚ್ಎಎಲ್ ಮತ್ತು ಅದರ ಷೇರುಗಳು ಹತ್ತು ವರ್ಷದ ಹಿಂದೆ ಅಪಾಯದಲ್ಲಿದ್ದವು. ಈಗ ಅದರ ಷೇರು ಬೆಲೆ 3 ಸಾವಿರ ರೂ. ದಾಟಿದೆ. ಹೆಚ್ಎಎಲ್ ಹಲವು ಮೈಲುಗಲ್ಲು ಸಾಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
13
+ ಭಾರತೀಯರಿದ್ದ ಹಡಗು ಇರಾನ್ ವಶದಲ್ಲಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದೇಶದೊಳಗಷ್ಟೇ ಅಲ್ಲ ಹೊರದೇಶದಲ್ಲೂ ಮೋದಿಯವರೇ ಗ್ಯಾರಂಟಿ. ಇರಾನ್ ಸರ್ಕಾರದ ಜತೆ ನಮ್ಮ ಭಾರತೀಯರ ಬಿಡುಗಡೆ ಬಗ್ಗೆ ಮಾತಾಡಿದ್ದೇನೆ. ನಿನ್ನೆ ಈ ನಿಟ್ಟಿನಲ್ಲಿ ಸಕಾರಾತ್ಮಕ ಮಾತುಕತೆ ನಡೆದಿದೆ. ನಮ್ಮ ವಿದೇಶಾಂಗ ಇಲಾಖೆ ಅಧಿಕಾರಿಗಳು ಇರಾನ್ ವಶದಲ್ಲಿರುವ ಭಾರತೀಯರ ಭೇಟಿ ಮಾಡಿದ್ದಾರೆ. ಇದು ನಮಗೆ ಸಮಾಧಾನ ತಂದಿರುವ ವಿಚಾರ. ಆದಷ್ಟು ಬೇಗ ಇರಾನ್ ಭಾರತೀಯರನ್ನ ಬಿಡುಗಡೆ ಮಾಡುವ ಭರವಸೆ ಇದೆ ಎಂದರು.
14
+ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಅನುಮಾನಾಸ್ಪದ ಸರಣಿ ಸಾವು ಪ್ರಕರಣ ಕುರಿತು ಮಾತನಾಡಿದ ಅವರು, ಇದು ನಮಗೆ ಹೆಚ್ಚಿನ ಆತಂಕ ಹುಟ್ಟಿಸಿದೆ, ಆ ವಿದ್ಯಾರ್ಥಿಗಳ ಕುಟುಂಬಳಿಗೆ ದುರಂತ ಈ ರೂಪದಲ್ಲಿ ಎದುರಾಗಿದೆ. ಮೃತರ ಬಗ್ಗೆ ನಾನು ತೀವ್ರ ಸಂತಾಪ ಸೂಚಿಸುತ್ತೇನೆ, ಅವರ ಕುಟುಂಬಗಳಿಗೂ ಸಾಂತ್ವನ ಹೇಳಲು ಬಯಸುತ್ತೇನೆ ಎಂದರು.
15
+ ಹಲವು ಕಾರಣಗಳಿಗೆ ಭಾರತೀಯ ವಿದ್ಯಾರ್ಥಿಗಳು ಅಮೆರಿಕದಲ್ಲಿ ಸಾವನ್ನಪ್ಪುತ್ತಿದ್ದಾರೆ. ಹೊಸ ವಿದ್ಯಾರ್ಥಿಗಳು ಅಲ್ಲಿಗೆ ಹೋದಾಗ ರಾಯಭಾರ ಕಚೇರಿ ಅಧಿಕಾರಿಗಳಿಗೆ ನಿಗಾ ಇಡಲು ಸೂಚಿಸಲಾಗಿದೆ. ಅಮೆರಿಕಾದಲ್ಲಿ ವಿದ್ಯಾರ್ಥಿಗಳ ಜೀವ ರಕ್ಷಣೆ, ಭದ್ರತೆ ನಮ್ಮ ಆದ್ಯತೆಗಳಲ್ಲೊಂದಾಗಿದೆ. ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮತ್ತು ಕೆಲಸ ಮಾಡುತ್ತಿರುವವರ ಮಾಹಿತಿ ಕಲೆ ಹಾಕುತ್ತಿದ್ದೇವೆ. ರಕ್ಷಣೆ ಇಲ್ಲದ ಜಾಗಕ್ಕೆ ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದೇವೆ. ಜೊತೆಗೆ ಇಲ್ಲಿಂದಲೂ ಎಲ್ಲ ಕ್ರಮ ಕೈಗೊಳ್ಳುತ್ತಿದ್��ೇವೆ ಎಂದು ಜೈಶಂಕರ್ ತಿಳಿಸಿದರು.
eesanje/url_46_178_11.txt ADDED
@@ -0,0 +1,7 @@
 
 
 
 
 
 
 
 
1
+ ಬೆಂಗಳೂರಿನಲ್ಲೇ ತಂಗಿದ್ದ ಮುಸಾವೀರ್ ಮತ್ತು ಅಬ್ದುಲ್ ಮತಿನ್
2
+ ಬೆಂಗಳೂರು, ಏ.15-ನಗರದ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮತಿನ್ ತಾಹ ಈ ಹಿಂದೆ ಬೆಂಗಳೂರು ನಗರದಲ್ಲಿ ಕೆಲವು ದಿನಗಳ ಕಾಲ ತಂಗಿದ್ದರು ಎಂಬುದು ಎನ್ಐಎ ತನಿಖೆಯಿಂದ ಗೊತ್ತಾಗಿದೆ. ಈ ಇಬ್ಬರು ಭಯೋತ್ಪಾದಕ ಸಂಘಟನೆಯಾದ ಐಸಿಎಸ್ ಜೊತೆ ಸಂಪರ್ಕ ಹೊಂದಿದ್ದರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
3
+ ಇವರು ಐಸಿಎಸ್ ಜೊತೆ ನೇರ ನಂಟು ಹೊಂದಿದ್ದ ಮೆಹಬೂಬ್ ಪಾಷಾನ ಜೊತೆ ಸತತ ಸಂಪರ್ಕದಲ್ಲಿದ್ದರು. ಮೆಹಬೂಬ್ ಪಾಷಾ 2020 ರಲ್ಲಿ ಬೆಂಗಳೂರಿಗೆ ಬಂದು ತಮ್ಮ ಹೆಸರನ್ನು ಬದಲಿಸಿಕೊಂಡು ಸುದ್ದಗುಂಟೆ ಪಾಳ್ಯದ ಸೂರ್ಯಸಿಟಿ ರೆಸಿಡೆನ್ಸಿಯ 2ನೇ ಮಹಡಿಯಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಾಗಿದ್ದುದ್ದು ಎನ್ಐಎ ವಿಚಾರಣೆಯಿಂದ ಗೊತ್ತಾಗಿದೆ.
4
+ ಒಂದು ವರ್ಷಕ್ಕೂ ಹೆಚ್ಚು ಕಾಲ ನಗರದಲ್ಲಿ ವಾಸವಾಗಿದ್ದುಕೊಂಡು ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ ಆರೋಪಿ ಮೆಹಬೂಬ್ ಪಾಷಾ ಸಾಮಾಜಿಕ ಕಾರ್ಯ ಮಾಡುವ ನಿಟ್ಟಿನಲ್ಲಿ ನಗರದಲ್ಲಿ ಅಲ್ ಹಿಂದ್ ಐಸಿಸ್ ಹೆಸರಿನಲ್ಲಿ ಎನ್ಜಿಒ ಸ್ಥಾಪನೆ ಮಾಡಲು ಮುಂದಾಗಿದ್ದಲ್ಲದೇ ಈ ಸಂಸ್ಥೆ ಮೂಲಕ ಮುಸ್ಲಿಂ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.
5
+ ಗುರುಪ್ಪನಪಾಳ್ಯದ ಮನೆಯೊಂದರಲ್ಲಿ ಶಂಕಿತ ಉ್ರಗರ ಜೊತೆ ಆರೋಪಿ ಮೆಹಬೂಬ್ ಪಾಷಾ ಸಭೆಗಳನ್ನು ನಡೆಸುತ್ತಿದ್ದಾಗ ಈ ಇಬ್ಬರು ಉಗ್ರರು ಭಾಗಿಯಾಗಿದ್ದರು ಎಂಬುವುದು ತಿಳಿದು ಬಂದಿದೆ. ಅಂದು ಸಿಸಿಬಿ ಪೊಲೀಸರು ಮತ್ತು ಗುಪ್ತ ದಳದ ಅಧಿಕಾರಿಗಳು ಮೆಹಬೂಬ್ ಪಾಷಾ ಮನೆ ಮೇಳೆ ದಾಳಿ ಮಾಡಿದಾಗ ಪಾಷ ಸೇರಿದಂತೆ ಹಲವರನ್ನು ಬಂಧಿಸಿದ್ದರು.
6
+ ಆ ಸಂದರ್ಭದಲ್ಲಿ ಈ ಇಬ್ಬರು ಉಗ್ರರು ತಲೆ ಮರೆಸಿಕೊಂಡಿದ್ದರು. ಸಭೆಯಿಂದ ಪ್ರೇರೆಪಣೆಗೊಂಡಿದ್ದ ಈ ಇಬ್ಬರು ಉಗ್ರರು ಶಿವಮೊಗ್ಗದಲ್ಲಿ ದುವಾ ಎಂಬ ಹೆಸರಿನಲ್ಲಿ ಎನ್ಜಿಒ ಸಂಸ್ಥೆ ತೆರೆದು ಸಾಮಾಜಿಕ ಸೇವೆ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಒಟ್ಟುಗೂಡಿಸಿ ಜಿಹಾದಿ ಬೋಧಿಸುತ್ತಿದ್ದರು.
7
+ 2021ರಲ್ಲಿ ತಲೆ ಮರೆಸಿಕೊಂಡಿದ್ದ ಈ ಇಬ್ಬರು ಉಗ್ರರು ಮಾ.1ರಂದು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿ ಪಶ್ಚಿಮ ಬಂಗಾಳ ಕೋಲ್ಕತಾದಲ್ಲಿ ಅಡಗಿ ಕುಳಿತಿದ್ದರು. ಎನ್ಐಎ ಅಧಿಕಾರಿಗಳಿಗೆ ಇದೀಗ ಈ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದು ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
eesanje/url_46_178_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ, ಶಕ್ತಿ ಪ್ರದರ್ಶನ
2
+ ಬೆಂಗಳೂರು,ಏ.15-ಮೊದಲ ಹಂತದ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಿಕೊಳ್ಳಲು ವಿವಿಧ ರಾಜಕೀಯ ಪಕ್ಷಗಳು ಬೆವರು ಹರಿಸುತ್ತಿರುವ ಬೆನ್ನಲ್ಲೇ 2ನೇ ಹಂತದ ಚುನಾವಣೆಗೆ ಸೋಮವಾರ ಹಲವು ದಿಗ್ಗಜರು ನಾಮಪತ್ರ ಸಲ್ಲಿಸಿದ್ದಾರೆ.
3
+ ಮೇ 7ರಂದು ನಡೆಯಲಿರುವ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಅಭ್ಯರ್ಥಿಗಳು ಶಕ್ತಿ ಪ್ರದರ್ಶಿಸುವ ಮೂಲಕ ಉಮೇದುವಾರಿಕೆ ಮಾಡಿದರು. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ(ಹಾವೇರಿ), ಜಗದೀಶ್ ಶೆಟ್ಟರ್(ಬೆಳಗಾವಿ), ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ(ಧಾರವಾಡ), ಗೀತಾ ಶಿವರಾಜ್ಕುಮಾರ್(ಶಿವಮೊಗ್ಗ), ಮೃಣಾಲ್ ಹೆಬ್ಬಾಳ್ಕರ್(ಬೆಳಗಾವಿ) ಮತ್ತಿತರ ಪ್ರಮುಖ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರ ಜೊತೆಗೂಡಿ ಮೆರವಣಿಗೆ ಮೂಲಕ ಆಗಮಿಸಿ ಅನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.
4
+ ಚುನಾವಣೆಗೂ ಮುನ್ನವೇ ಭಾರೀ ಸದ್ದು ಮಾಡಿರುವ ಪ್ರತಿಷ್ಠಿತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚಿತ್ರನಟ ಶಿವರಾಜ್ಕುಮಾರ್ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್ಕುಮಾರ್ 2ನೇ ಬಾರಿಗೆ ಅದೃಷ್ಟವನ್ನು ಪಣಕ್ಕಿಟ್ಟಿದ್ದಾರೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಶಿವರಾಜ್ಕುಮಾರ್, ಶಾಸಕರಾದ ಗೋಪಾಲಕೃಷ್ಣ ಗೌಡರು, ಅಪ್ಪಾಜಿಗೌಡ ಸೇರಿದಂತೆ ಹಲವು ಪ್ರಮುಖರು ಹಾಗೂ ಭಾರೀ ಸಂಖ್ಯೆಯ ಕಾರ್ಯಕರ್ತರ ಜೊತೆಗೂಡಿ ತೆರೆದ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದಾರೆ.
5
+ ಬಿಜೆಪಿಗೆ ಸವ್ವಾಸೇರು ಎನ್ನುವಂತೆ ಶಕ್ತಿ ಪ್ರದರ್ಶಿಸಿದ ಕಾಂಗ್ರೆಸ್ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಿತ್ತು. ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತೊಮ್ಮೆ ಸಾಂಕೇತಿಕವಾಗಿ ಉಮೇದುವಾರಿಕೆ ಮಾಡಿದರು.
6
+ ಇನ್ನು ಶಿವಮೊಗ್ಗದಂತೆ ದಿಂಗಾಲೇಶ್ವರ ಸ್ವಾಮಿ ಸ್ಪರ್ಧೆಯಿಂದಾಗಿ ರಾಜ್ಯದ ಗಮನಸೆಳೆದಿರುವ ಧಾರವಾಡದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನಾಮಪತ್ರ ಸಲ್ಲಿಸಿದರು. ಜೋಷಿ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಅರವಿಂದ್ ಬೆಲ್ಲದ್ ಸೇರಿದಂತೆ ಘಟಾನುಘಟಿ ನಾಯಕರು ಆಗಮಿಸಿದ್ದರು.
7
+ ಕಾಂಗ್ರೆಸ್ ಹಾಗೂ ದಿಂಗಾಲೇಶ್ವರ ಸ್ವಾಮೀಜಿಗೆ ತಿರುಗೇಟು ನೀಡುವಂತೆ ಬಿಜೆಪಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ಜೋಷಿ ಅವರು ಧಾರವಾಡದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂ���ರ ನಾಮಪತ್ರ ಸಲ್ಲಿಕೆ ಮಾಡಿದರು. ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಬೆಳಗಾವಿಯಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ.
8
+ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಮುಖಂಡರು ನಾಮಪತ್ರ ಸಲ್ಲಿಸುವ ವೇಳೆ ಭಾಗಿಯಾಗಿದ್ದರು. ಬೆಳಗಾವಿಯ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಅಪಾರ ಬೆಂಬಲಿಗರ ನಡುವೆ ಇಂದು ಜಿಲ್ಲಾಕಾರಿಗೆ ನಾಮಪತ್ರ ಸಲ್ಲಿಸಿದರು. ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ ಜಾರಕಿಹೊಳಿ, ಹನಮಂತ ನಿರಾಣಿ, ಮಾಜಿ ಶಾಸಕ ಅನಿಲ ಬೆನಕೆ ಉಪಸ್ಥಿತರಿದ್ದರು.
9
+ ಬೆಳಗಾವಿ ಜಿಲ್ಲೆಯ ಮತ್ತೊಂದು ಕ್ಷೇತ್ರವಾದ ಚಿಕ್ಕೋಡಿಯಲ್ಲಿ 2ನೇ ಬಾರಿಗೆ ಅದೃಷ್ಟ ಪರೀಕ್ಷಿಸಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಸೀಮಿತ ಬೆಂಬಲಿಗರೊಂದಿಗೆ ಆಗಮಿಸಿ ಉಮೇದುವಾರಿಕೆ ಮಾಡಿದ್ದಾರೆ. ಹಾವೇರಿಯಿಂದ ಮೊದಲ ಬಾರಿಗೆ ಅದೃಷ್ಟ ಪಣಕ್ಕಿಟ್ಟಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಮೇದುವಾರಿಕೆ ಮಾಡಿದ್ದಾರೆ.
10
+ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವರಾದ ಬಿ.ಸಿ.ಪಾಟೀಲ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಉಮೇದುವಾರಿಕೆ ಮಾಡಿದ್ದಾರೆ. ಸೋಮವಾರ ಕೆಲವು ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಒಂದೆರಡು ದಿನದಲ್ಲಿ ಭಾರೀ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮತ್ತೊಂದು ಬಾರಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಗೊತ್ತಾಗಲಿದೆ.
11
+ 2ನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕಡೆಯ ದಿನವಾಗಿದ್ದು, ಶುಭ ಮುಹೂರ್ತ, ಶುಭ ಗಳಿಗೆ ನೋಡಿಕೊಂಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಉತ್ತರಕನ್ನಡ, ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬಿಜಾಪುರ, ಬೀದರ್, ಕಲಬುರಗಿ ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ.
eesanje/url_46_178_2.txt ADDED
@@ -0,0 +1,6 @@
 
 
 
 
 
 
 
1
+ ಐಟಿ-ಬಿಟಿ ಕಂಪನಿಗಳನ್ನು ಟಾರ್ಗೆಟ್ ಮಾಡಿದ್ದ ರಾಮೇಶ್ವರಂ ಕೆಫೆ ಸ್ಫೋಟದ ಕಿರಾತಕರು..!
2
+ ಬೆಂಗಳೂರು, ಏ.16-ಐಟಿ-ಬಿಟಿ ಹಬ್ ಎಂದೇ ಕರೆಯಲ್ಪಡುವ ವೈಟ್ಫೀಲ್ಡ್ ನಲ್ಲಿರುವ ಐಟಿ ಕಂಪೆನಿ ಗಳನ್ನು ಗುರಿಯಾಗಿಸಿಕೊಂಡು ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು ತದನಂತರದಲ್ಲಿ ಹೈ ಸೆಕ್ಯುರಿಟಿ ಗಮನಿಸಿ ತಮ್ಮ ಯೋಜನೆ ಬದಲಾಯಿಸಿ ರಾಮಮಂದಿರ ಉದ್ಘಾಟನೆ ವೇಳೆ ಸಂಭ್ರಮಾಚರಣೆ ನಡೆಸಿದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಲಾಯಿತ್ತೆಂದು ಎನ್ಐಎ ತನಿಖಾ ಅಧಿಕಾಧಿರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ.
3
+ ರಾಮೇಶ್ವರಂ ಕೆಫೆಯಲ್ಲೇ ಏಕೆ ಸ್ಫೋಟಿಸಲಾಯಿತ್ತೆಂದು ತನಿಖಾಕಾಧಿರಿಗಳು ಬಂತ ಇಬ್ಬರು ಉಗ್ರರನ್ನು ವಿಚಾರಣೆಗೊಳಪಡಿಸಿದಾಗ, ಮೊದಲು ವೈಟ್ಫೀಲ್ಡ್ ನಲ್ಲಿ ದೊಡ್ಡ ದೊಡ್ಡ ಐಟಿ-ಬಿಟಿ ಕಂಪೆನಿಗಳಿವೆ. ಒಂದೊಂದು ಕಂಪೆನಿಗಳಲ್ಲಿ ಸಾವಿರಾರು ಮಂದಿ ಸಾಫ್ಟ್ವೇರ್ ಎಂಜಿನಿಯರ್ಗಳು ಕೆಲಸ ಮಾಡುತ್ತಾರೆ. ಈ ಕಂಪೆನಿಗಳಲ್ಲಿ ಬಾಂಬ್ ಸ್ಫೋಸೋಟಿಸಿದರೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆಂದು ಆ ಪ್ರದೇಶವನ್ನು ಆಯ್ಕೆ ಮಾಡಿಕೊಂಡಿದ್ದೆವು.
4
+ ಆದರೆ ಆ ಪ್ರದೇಶದಲ್ಲಿ ಹೈಸೆಕ್ಯುರಿಟಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿ ಕ್ಯಾಮೆರಾಗಳು ಕಣ್ಗಾವಲಿದ್ದವು. ಮತ್ತು ಐಟಿ ಕಂಪೆನಿಯೊಳಗೆ ಹೋಗಲು ಡಿಟೆಕ್ಟರ್ ನಿಂದ ತಪಾಸಣೆ ಮಾಡಲಾಗುತ್ತದೆ. ಹಾಗಾಗಿ ತಾವು ಎಲ್ಲಿ ಸಿಕ್ಕಿಕೊಳ್ಳುತ್ತೇವೆಂಬ ಭಯದಲ್ಲಿ ಐಟಿ ಕಂಪೆನಿ ಸ್ಫೋಟಿಸುವ ಸಂಚನ್ನು ಕೈಬಿಟ್ಟೆವು.
5
+ ತದನಂತರದಲ್ಲಿ ವೈಟ್ಫೀಲ್ಡ್ ಪ್ರದೇಶದಲ್ಲೇ ಓಡಾಡಿಕೊಂಡಿದ್ದಾಗ ಈ ಪ್ರದೇಶದಲ್ಲಿ ಬಾಂಬ್ ಸ್ಫೋಟಿಸುವುದು ಕಷ್ಟ ಎಂಬುವುದು ಗೊತ್ತಾಯಿತು. ಆದರೂ ಯಾವುದಾದರೂ ಒಂದು ಸ್ಥಳದಲ್ಲಿ ಸ್ಫೋಟಿಸಬೇಕೆಂದು ಯೋಚಿಸುತ್ತಿದ್ದಾಗ ರಾಮೇಶ್ವರಂ ಕೆಫೆ ಕಂಡು ಬಂತು.ಈ ರಾಮೇಶ್ವರಂ ಕೆಫೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸುತ್ತಮುತ್ತಲಿನ ಐಟಿ-ಬಿಟಿ ಕಂಪೆನಿಗಳ ಉದ್ಯೋಗಗಳೇ ಬರುವುದು ಗಮನಿಸಿದೆವು. ಅಲ್ಲದೆ, ರಾಮಮಂದಿರ ಉದ್ಘಾಟನೆ ಸಮಯದಲ್ಲಿ ಕೆಫೆ ಮುಂಭಾಗ ಅದ್ಧೂರಿ ಸಂಭ್ರಮಾಚರಣೆ ನಡೆದಿತ್ತು. ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.
6
+ ಈ ರಾಮೇಶ್ವರಂ ಕೆಫೆಯೊಳಗೆ ಹೋಗಲು ಯಾವುದೇ ಸೆಕ್ಯುರಿಟಿಯಾಗಲೀ, ಮೆಟಲ್ ಡಿಟೆಕ್ಟರ್ ಕೂಡ ಇಲ್ಲದಿರುವುದನ್ನು ಗಮನಿಸಿ ಸುಲಭವಾಗಿ ಕೆಫೆಯೊಳಗೆ ಹೋಗಬಹುದೆಂದು ನಿರ್ಧರಿಸಿ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸುವ ನಿರ್ಧಾರಕ್ಕೆ ಬಂದಿದ್ದಾಗಿ ಉಗ್ರ ಮುಸಾವೀರ್ ಹುಸೇನ್ ಹಾಗೂ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಹಾ ವಿಚಾರಣೆ ಸಂದರ್ಭದಲ್ಲಿ ಎನ್ಐಎ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. ಈ ಇಬ್ಬರು ಉಗ್ರರನ್ನು ಇನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಎನ್ಐಎ ಕಲೆ ಹಾಕುತ್ತಿದೆ.
eesanje/url_46_178_3.txt ADDED
@@ -0,0 +1,6 @@
 
 
 
 
 
 
 
1
+ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ, 40 ಸಾವಿರ ನಗದು, 3 ಚಾಕು ವಶಕ್ಕೆ
2
+ ಬೆಂಗಳೂರು,ಏ.16-ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ನಗದು, ಮೂರು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
3
+ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜೈಲಿನಲ್ಲಿರುವ ರೌಡಿಶೀಟರ್ಸ್ ಮತ್ತು ಅಪರಾಗಳು ಜೈಲಿನಿಂದಲೇ ಚುನಾವಣಾ ಅಕ್ರಮಕ್ಕೆ ಕುಮ್ಮಕು ನೀಡುತ್ತಿದ್ದಾರೆ ಎಂಬುದರ ಜೊತೆಗೆ ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳ ಮೇಲೆ ನಿಗಾ ಇಡಲು, ಡ್ರಗ್ಸ್ ಸರಬರಾಜು ಮತ್ತು ಬಳಕೆ, ಮೊಬೈಲ್‍ ಫೋನ್‍ಗಳ ಬಳಕೆ ಸೇರಿದಂತೆ ಇತರೆ ಕುಟೀಲ ಕಾರ್ಯಗಳಲ್ಲಿ ತೊಡಗಿರುವರ ಮೇಲೆ ನಿಗಾವಹಿಸಲು ಈ ದಾಳಿ ನಡೆಸಲಾಗಿದೆ ಎಂದು ಆಯುಕ್ತರು ತಿಳಿಸಿದರು.
4
+ ಇತ್ತೀಚಿನ ದಿನಗಳಲ್ಲಿ ಜೈಲುಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವ ಸ್ಥಳವಾಗಿ ಪರಿವರ್ತನೆಯಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜೈಲುಗಳು ಪೊಲೀಸ್ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಅದು ಬೇರೆ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತವೆ.
5
+ ರಾಮೇಶ್ವರಂ ಕೆಫೆ ಸೋಟಕ್ಕೂ ಜೈಲ್ಲಿನಿಂದಲೇ ಸಂಚು ರೂಪಿಸಲಾಗಿತ್ತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಎನ್‍ಐಎ ತನಿಖೆ ನಡೆಸುತ್ತಿದ್ದು, ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಮನಃಪರಿವರ್ತನೆ, ಆರೋಗ್ಯ ಸಮಸ್ಯೆ, ವಯಸ್ಸು ಅಥವಾ ರೌಡಿ ಚಟುವಟಿಕೆಗಳಿಂದ ನಿಷ್ಕ್ರಿಯರಾದವರನ್ನು ಹೈಕೋರ್ಟ್‍ನ ಮಾರ್ಗಸೂಚಿಯ ಆಧಾರದ ಮೇಲೆ ರೌಡಿ ಪಟ್ಟಿಯಿಂದ ಅವರ ಹೆಸರುಗಳನ್ನು ತೆರವು ಮಾಡಲಾಗುತ್ತದೆ.
6
+ ಅದೇ ರೀತಿ ಸಮಾಜದಲ್ಲಿ ಶಾಂತಿ ಕದಡುವ ವ್ಯಕ್ತಿಗಳ ವಿರುದ್ಧ ರೌಡಿ ಪಟ್ಟಿ ತೆರೆಯಲಾಗುವುದು. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಏ.24ರ ಮಧ್ಯರಾತ್ರಿ 12 ಗಂಟೆಯಿಂದ 26 ಮಧ್ಯರಾತ್ರಿ 12ರವರೆಗೆ ಮತ್ತು ಜೂ.3ರ ಮಧ್ಯರಾತ್ರಿ 12ರಿಂದ ಜೂ.4ರ ಮಧ್ಯರಾತ್ರಿವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ ಮದ್ಯ ನಿಷೇಧ ಮತ್ತು ಧ್ವನಿವರ್ಧಕಗಳ ಬಳಕೆ ಸಂಪೂರ್ಣವಾಗಿ ನಿಷೇಸಲಾಗುವುದು ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಆಯುಕ್ತರು ಮನವಿ ಮಾಡಿದರು.
eesanje/url_46_178_4.txt ADDED
@@ -0,0 +1,8 @@
 
 
 
 
 
 
 
 
 
1
+ ಲೋಕಸಭಾ ಚುನಾವಣೆಯಲ್ಲಿ ಹಣ-ಮದ್ಯದ ಜೊತೆ ಹರಿದುಬಂದ ದೂರುಗಳು
2
+ ಬೆಂಗಳೂರು,ಏ.16-ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗದು, ಹಣ, ಮದ್ಯ, ಚಿನ್ನಾಭರಣ ದಾಖಲೆ ಪ್ರಮಾಣದಲ್ಲಿ ಜಪ್ತಿಯಾಗುತ್ತಿರುವುದಷ್ಟೇ ಅಲ್ಲ, ದೂರುಗಳ ಸುರಿಮಳೆಯೂ ಆಗುತ್ತಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಬಂದಾಗಿನಿಂದಲೂ ನಿನ್ನೆಯವರೆಗೆ 357.91 ಕೋಟಿ ರೂ.ನಷ್ಟು ಹಣ ಹಾಗೂ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
3
+ 1,751 ಎಫ್‍ಐಆರ್‍ಗಳನ್ನು ದಾಖಲಿಸಿದ್ದು, 1,388 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿವಿಜಿಲ್ ಅಪ್ಲಿಕೇಶನ್ ಮೂಲಕ 23,362 ಸ್ವೀಕರಿಸಲಾಗಿತ್ತು. ಈ ಪೈಕಿ 13,935 ದೂರುಗಳು ಅನುಮತಿ ಇಲ್ಲದ ಪೋಸ್ಟರ್, ಬ್ಯಾನರ್‍ಗಳಿಗೆ ಸಂಬಂಧಿಸಿದ್ದರೆ, 1,076 ದೂರುಗಳು ಕಡ್ಡಾಯ ಘೋಷಣೆಯಿಲ್ಲದ ಪೋಸ್ಟರ್‍ಗಳಿಗೆ ಸಂಬಂಧಿಸಿವೆ. ಹಣ ವಿತರಣೆ ಬಗ್ಗೆ 191 ಉಚಿತ ಉಡುಗೊರೆ, ಕೂಪನ್‍ಗಳಿಗೆ ಸಂಬಂಧಿಸಿದಂತೆ 113, ಮದ್ಯ ಹಂಚಿಕೆಗೆ ಸಂಬಂಧಪಟ್ಟಂತೆ 129 ಸೇರಿದಂತೆ ವಿವಿಧ ರೀತಿಯ ದೂರುಗಳನ್ನು ಸಲ್ಲಿಸಲಾಗಿದೆ.
4
+ ಒಟ್ಟು 22,045 ದೂರುಗಳು ಸರಿಯಾಗಿವೆ ಎಂದು ಕಂಡುಹಿಡಿದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಇ-ಮೇಲ್ ಮೂಲಕ 183, ಪತ್ರಗಳ ಮೂಲಕ 568 ಹಾಗೂ ಸಾಮಾಜಿಕ ಜಾಲತಾಣ ಮಾಧ್ಯಮದ ಮೂಲಕ 53 ದೂರುಗಳನ್ನು ಸ್ವೀಕರಿಸಿದ್ದು, ಒಟ್ಟು 860 ದೂರುಗಳನ್ನು ವಿಲೇವಾರಿ ಮಾಡಲಾಗಿದೆ.
5
+ ಸುವಿಧ ಅಡಿಯಲ್ಲಿ ಅನುಮತಿಗಾಗಿ 5,337 ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 3,918 ಅರ್ಜಿಗಳನ್ನು ಅಂಗೀಕರಿಸಿದ್ದು, 833 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 220 ಅರ್ಜಿಗಳನ್ನು ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
6
+ ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 104.27 ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದರೆ, ಅಬಕಾರಿ ಇಲಾಖೆಯವರು 160.33 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
7
+ ಆದಾಯ ತೆರಿಗೆ ಇಲಾಖೆಯವರು 13.80 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ, ವಾಣಿಜ್ಯ ತೆರಿಗೆ ಅಧಿಕಾರಿಗಳು 79.51 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
8
+ ಅಬಕಾರಿ ಇಲಾಖೆಯವರು 35.24 ಲಕ್ಷ ರೂ. ಮೌಲ್ಯದ 4,978.485 ಲೀ ಮದ್ಯವನ್ನು ಜೆ.ಪಿ.ನಗರದಲ್ಲಿ ಮತ್ತು ವಿದ್ಯಾಪೀಠ ವೃತ್ತದಲ್ಲಿ ವಶಪಡಿಸಿಕೊಂಡಿದ್ದಾರೆ.77.84 ಲಕ್ಷ ರೂ. ಮೌಲ್ಯದ 4,371.970 ಲೀ ಮದ್ಯವನ್ನು ಬೆಂಗಳೂರು ವಿಹಾರ ಕೇಂದ್ರ ಹಾಗೂ ಬನಶಂಕರಿಯಲ್ಲಿ ವಶಪಡಿಸಿಕೊಂಡಿದ್ದರೆ, 20 ಲಕ್ಷ ರೂ. ನಗದನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
eesanje/url_46_178_5.txt ADDED
@@ -0,0 +1,8 @@
 
 
 
 
 
 
 
 
 
1
+ ಚುನಾವಣೆ ಘೋಷಣೆ ಬಳಿಕ ನಾಳೆ ಮೊದಲ ಬಾರಿಗೆ ರಾಜ್ಯಕ್ಕೆ ರಾಹುಲ್‍ ಆಗಮನ
2
+ ಬೆಂಗಳೂರು,ಏ.16-ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ರಾಹುಲ್‍ಗಾಂಧಿ ನಾಳೆ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
3
+ ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುವ ರಾಹುಲ್‍ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.
4
+ ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ರಾಹುಲ್‍ಗಾಂಧಿ ಹಲವು ಬಾರಿ ರಾಜ್ಯಪ್ರವಾಸ ಕೈಗೊಂಡಿದ್ದರು. ಅದಕ್ಕೂ ಮೊದಲು ಭಾರತ್ ಜೋಡೊ ಯಾತ್ರೆ ಮೂಲಕ ರಾಜ್ಯದ ಚಾಮರಾಜನಗರ, ಮೈಸೂರು, ತುಮಕೂರು, ಬಳ್ಳಾರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಸ ನಡೆಸಿದರು.
5
+ ಈ ನಡುವೆ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದರಾದರೂ ಗಮನ ಸೆಳೆಯುವಂಥ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್‍ಗಾಂಧಿಯವರ ಪ್ರವಾಸ ಕಾಂಗ್ರೆಸ್‍ನ ಉತ್ಸಾಹವನ್ನು ಹೆಚ್ಚಿಸಿದೆ.
6
+ 2019 ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಲ್ಲಿ ರಾಹುಲ್‍ಗಾಂಧಿ ಮಾಡಿದ್ದ ಭಾಷಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಅದನ್ನೇ ಆಧಾರವಾಗಿಟ್ಟುಕೊಂಡು ಬಿಜೆಪಿ ನಾಯಕರು ಕೋರ್ಟ್ ಮೆಟ್ಟಿಲೇರಿದ್ದರು. ಕೊನೆಗೆ ರಾಹುಲ್‍ಗಾಂಧಿಯವರಿಗೆ 2 ವರ್ಷ ಶಿಕ್ಷೆಯಾಗಿದ್ದಲ್ಲದೆ, ಸಂಸತ್ ಸದಸ್ಯ ಸ್ಥಾನ ಕೂಡ ಅನೂರ್ಜಿತಗೊಂಡಿತ್ತು. ಸುದೀರ್ಘ ಕಾನೂನಿನ ಹೋರಾಟದ ಬಳಿಕ ಗುಜರಾತ್‍ನ ಅಧೀನ ನ್ಯಾಯಾಲಯದ ತೀರ್ಪಿನಿಂದ ರಾಹುಲ್‍ಗಾಂಧಿ ಸುಪ್ರೀಂಕೋರ್ಟ್ ಮೂಲಕ ವಿನಾಯಿತಿ ಪಡೆದಿದ್ದಾರೆ.
7
+ ನಾಳೆ ರಾಜ್ಯಕ್ಕೆ ಆಗಮಿಸುತ್ತಿರುವ ರಾಹುಲ್‍ಗಾಂಧಿ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ. ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿ 4 ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಅದಕ್ಕೂ ಮೊದಲು ಕಲಬುರಗಿಯಲ್ಲೂ ಪ್ರಧಾನಿ ಭಾಷಣ ಮಾಡಿದ್ದರು.
8
+ ರಾಹುಲ್‍ಗಾಂಧಿ ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಎರಡು ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರನ್ನು ಸೇರಿಸಲು ಕಾಂಗ್ರೆಸ್ ನಾಯಕರು ತಯಾರಿ ಮಾಡಿಕೊಂಡಿದ್ದಾರೆ.
eesanje/url_46_178_6.txt ADDED
@@ -0,0 +1,4 @@
 
 
 
 
 
1
+ ವ್ಯಾಪಾರಕ್ಕೆಂದು ಸೂಡಾನ್‍ಗೆ ತೆರಳಿದ್ದ ಮೈಸೂರಿನ ಮಹಿಳೆ ಅನುಮಾನಾಸ್ಪದ ಸಾವು
2
+ ನವದೆಹಲಿ, ಏ.16-ವ್ಯಾಪಾರಕ್ಕೆಂದು ದೂರದ ಸೂಡಾನ್‍ಗೆ ತೆರಳಿದ್ದ ಮೈಸೂರಿನ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಪಕ್ಷಿರಾಜಪುರದ ನಿವಾಸಿ ನಂದಿನಿ ಸೂಡಾನ್‍ನಲ್ಲಿ ಮೃತಪಟ್ಟಿದ್ದಾರೆಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಖಚಿತಪಡಿಸಿದೆ.
3
+ ಇದೀಗ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ಸೂಡಾನ್‍ನಲ್ಲಿರುವ ಭಾರತದ ರಾಯಭಾರಿಯನ್ನು ಸಂಪರ್ಕಿಸಿದ್ದಾರೆ. ಮೃತದೇಹವನ್ನು ಸೂಡಾನ್‍ನಿಂದ ನೈಜೀರಿಯಾ ಮೂಲಕ ನವದೆಹಲಿಗೆ ತಂದು ನಂತರ ಬೆಂಗಳೂರು ಮೂಲಕ ಮೈಸೂರಿಗೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ.
4
+ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಜೈಶಂಕರ್‍ಗೆ ಎಲ್ಲಾ ಮಾಹಿತಿಯನ್ನು ಒದಗಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲ ವರ್ಷಗಳ ಹಿಂದೆ ನಂದಿನಿ ವ್ಯಾಪಾರಕ್ಕಾಗಿ ಸೂಡಾನ್‍ಗೆ ತೆರಳಿದ್ದರು. ಅವರಿಗೆ ಪತಿ ಮತ್ತು ಮಕ್ಕಳಿದ್ದಾರೆ. ಶುಕ್ರವಾರ ಪಾರ್ಥೀ ಶರೀರ ತವರಿಗೆ ಬರುವ ಸಾಧ್ಯತೆ ಇದೆ ಎಂದು ರಾಯಭಾರಿ ಕಚೇರಿ ಮೂಲಗಳು ತಿಳಿಸಿವೆ.
eesanje/url_46_178_7.txt ADDED
@@ -0,0 +1,6 @@
 
 
 
 
 
 
 
1
+ ಕಾಂಗ್ರೆಸ್ ಸರ್ಕಾರದಿಂದ ಭರಪೂರ ಪ್ರತಿಫಲ ಪಡೆಯುತ್ತಿರುವ ನಟ ಪ್ರಕಾಶ್‍ ರಾಜ್
2
+ ಬೆಂಗಳೂರು,ಏ.16-ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಟ ಪ್ರಕಾಶ್ ರೈ ಉರುಫ್ ಪ್ರಕಾಶ್‍ರಾಜ್ ಎಂಬ ಕಲಾವಿದ ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
3
+ ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪ್ರಕಾಶ್‍ರಾಜ್ ದಾರಿ ತಪ್ಪಿರುವುದಕ್ಕೆ ಸಾಕ್ಷ್ಯವಿದೆ. ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರ್ಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? ಎಂದು ಪ್ರಕಾಶ್ ರಾಜ್ ಅವರನ್ನು ಪ್ರಶ್ನಿಸಿದೆ.
4
+ ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರ್ಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್ ಸರಕಾರಕ್ಕೆ ಕೈ ಬರುತ್ತಿಲ್ಲ. ಅಲ್ಲಿನ ಮಕ್ಕಳಿಗೆ ಒಳ್ಳೆಯ ಆಹಾರವಿಲ್ಲ, ನೀರೂ ಇಲ್ಲ. ಸರ್ಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ ನಿರ್ದಿಗಂತಕ್ಕೆ ಹಣದ ಹೊಳೆ ಸರ್ಕಾರ ಹರಿಸುತ್ತಿದೆ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
5
+ •ಕರ್ನಾಟಕದಲ್ಲಿ@INCKarnatakaಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್‌ ರೈ ಉರುಫ್‌@prakashraajಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ.ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ?…../xiKahlW0TY
6
+ ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಸಿಫ್ರಂಟ್ ಎಂಬ ಮಟ್ಟು-ಪಟ್ಟಿನ ಕಂಪನಿಗೆ ಕೋಟಿ ಕೋಟಿ ಸುರಿದಿರುವ ಕಾಂಗ್ರೆಸ್ ಸರ್ಕಾರ, ನಿಮ್ಮ ನಿರ್ದಿಗಂತಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕøತಿ ಇಲಾಖೆಯಲ್ಲಿ ಕಸ ಹೊಡೆಯುವವರು ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವುವರು ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ ಹೇಗೆ? ಎಂದು ಪ್ರಶ್ನಿಸಿದೆ.
eesanje/url_46_178_8.txt ADDED
@@ -0,0 +1,6 @@
 
 
 
 
 
 
 
1
+ 2040ರ ವೇಳೆಗೆ ವಾರ್ಷಿಕ 1 ಮಿಲಿಯನ್ ಮಹಿಳೆಯರನ್ನು ಬಲಿ ಪಡೆಯಲಿದೆಯಂತೆ ಕ್ಯಾನ್ಸರ್..!
2
+ ನವದೆಹಲಿ,ಎ.16-ಸ್ತನ ಕ್ಯಾನ್ಸರ್ ಈಗ ವಿಶ್ವದ ಅತ್ಯಂತ ಸಾಮಾನ್ಯವಾದ ಕಾರ್ಸಿನೋಜೆನಿಕ್ ಕಾಯಿಲೆಯಾಗಿದ್ದು, 2040 ರ ವೇಳೆಗೆ ಇದು ವಾರ್ಷಿಕ 1 ಮಿಲಿಯನ್ ಮಹಿಳೆಯರು ಸಾವು ಸಂಭವಿಸುವ ಸಾಧ್ಯತೆಯಿದೆ ಎಂದು ಜಾಗತಿಕ ಅಧ್ಯಯನವೊಂದು ಹೇಳಿದೆ.
3
+ 2020 ರ ಅಂತ್ಯದವರೆಗೆ ಸುಮಾರು 7.8 ಮಿಲಿಯನ್ ಮಹಿಳೆಯರು ಸ್ತನ ಕ್ಯಾನ್ಸರ್‍ನಿಂದ ಬಳಲುತ್ತಿದ್ದಾರೆ ಮತ್ತು ಅದೇ ವರ್ಷ ಸುಮಾರು 685,000 ಮಹಿಳೆಯರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಲ್ಯಾನ್ಸೆಟ್ ಆಯೋಗ ಹೇಳಿದೆ. ಜಾಗತಿಕವಾಗಿ, ಸ್ತನ ಕ್ಯಾನ್ಸರ್ ಪ್ರಕರಣಗಳು 2020 ರಲ್ಲಿ 2.3 ಮಿಲಿಯನ್‍ನಿಂದ 2040 ರ ವೇಳೆಗೆ 3 ಮಿಲಿಯನ್‍ಗಿಂತಲೂ ಹೆಚ್ಚಾಗುತ್ತದೆ,ಮುಖ್ಯವಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳ ಮೇಲೆ ಪರಿಣಾಮ ಬೀರುತ್ತವೆ ಎಂದು ಆಯೋಗವು ಅಂದಾಜಿಸಿದೆ.
4
+ 2040 ರ ವೇಳೆಗೆ, ರೋಗದಿಂದ ಸಾವುಗಳು ವರ್ಷಕ್ಕೆ ಒಂದು ಮಿಲಿಯನ್ ಆಗುತ್ತವೆ ಎಂದು ಅದು ಸೇರಿಸಿದೆ. ಅಸಮಾನತೆ ,ಹತಾಶೆ, ಸ್ತನ ಕ್ಯಾನ್ಸರ್‍ನಿಂದಾಗಿ ಮಹಿಳೆಯರು ಆರ್ಥಿಕ ಹೊರೆಯಿಂದ ಬಳಲುತ್ತಾರೆ ಮರೆಮಾಚುವುದರಿಂದ ಸಾಮಾನ್ಯವಾಗಿ ಅಪಾಯ ಹೆಚ್ಚಾಗುತ್ತದೆ. ಈ ಸವಾಲುಗಳನ್ನು ನಿಭಾಯಿಸಲು ರೋಗಿಗಳು ಮತ್ತು ಆರೋಗ್ಯ ವೃತ್ತಿಪರರ ನಡುವಿನ ಉತ್ತಮ ಸಂವಹನವ ನಿರ್ಣಾಯಕ ಮಧ್ಯಸ್ಥಿಕೆಯಾಗಿ ಅಗತ್ಯ ಎಂದು ಆಯೋಗ ಸೂಚಿಸಿದೆ.
5
+ ಜೀವನದ ಗುಣಮಟ್ಟ, ದೇಹದ ಚಿತ್ರಣ ಮತ್ತು ಚಿಕಿತ್ಸೆಯ ಅನುಸರಣೆಯನ್ನು ಸುಧಾರಿಸುತ್ತದೆ ಮತ್ತು ಬದುಕುಳಿಯುವಿಕೆಯ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ.ಮಹಿಳೆಯರ ಮೂಲಭೂತ ಹಕ್ಕುಗಳಿಗೆ ಐತಿಹಾಸಿಕವಾಗಿ ಎಲ್ಲಾ ವಿಧದಲ್ಲಿ ಪುರುಷರಿಗಿಂತ ಕಡಿಮೆ ಗೌರವವನ್ನು ನೀಡಲಾಗಿದೆ.ಇದು ಸ್ವಾಯತ್ತತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಮೆರಿಕದ ಎಮೋರಿ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್ ರೇಷ್ಮಾ ಜಗ್ಸಿ ಹೇಳಿದ್ದಾರೆ.
6
+ ಪ್ರತಿಯೊಬ್ಬ ಆರೋಗ್ಯ ವೃತ್ತಿಪರರು ಕೆಲವು ರೀತಿಯ ಸಂವಹನ ಕೌಶಲ್ಯಗಳ ತರಬೇತಿಯನ್ನು ಪಡೆಯಬೇಕು. ರೋಗಿಗಳು ಮತ್ತು ಆರೋಗ್ಯ ವೃತ್ತಿಪರರ ನಡುವಿನ ಸಂವಹನದ ಗುಣಮಟ್ಟವನ್ನು ಸುಧಾರಿಸುವುದು, ತೋರಿಕೆಯಲ್ಲಿ ಸರಳವಾಗಿದ್ದರೂ, ಸ್ತನ ಕ್ಯಾನ್ಸರ್ ನಿರ್ವಹಣೆಯ ನಿರ್ದಿಷ್ಟ ಸೆಟ್ಟಿಂಗ್‍ಗಳನ್ನು ಮೀರಿದ ಆಳವಾದ ಸಕಾರಾತ್ಮಕ ಪರಿಣಾಮಗಳನ್ನು ಬೀರಬಹುದು ಎಂದು ಜಗ್ಸಿ ಹೇಳಿದರು.ರೋಗಿಗಳಿಗೆ ವ್ಯಾಯಾಮ ಮತ್ತು ಅವರ ಆರೈಕೆ ಆರಿಸಿಕೊಳ್ಳಬೇಕು ಜಾಗೃತಿ ಮೂಡಬೇಕು ಎಂದು ಅವರು ಹೇಳಿದರು.
eesanje/url_46_178_9.txt ADDED
@@ -0,0 +1,6 @@
 
 
 
 
 
 
 
1
+ ದೆಹಲಿ ಸಿಎಂ ಕೇಜ್ರಿಗೆ ಏ.29ರವರೆಗೆ ತಿಹಾರ್ ಜೈಲೇ ಗತಿ
2
+ ಹೊಸದಿಲ್ಲಿ, ಅ 15 (ಪಿಟಿಐ) –ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲೂ ಜಾಮೀನು ದೊರೆತಿಲ್ಲದ ಕಾರಣ ಇನ್ನು ಸ್ವಲ್ಪ ದಿನಗಳ ಕಾಲ ತಿಹಾರ್ ಜೈಲಿನಲ್ಲೇ ಕಾಲ ಕಳೆಯುವಂತಹ ಸನ್ನಿವೇಶ ಎದುರಾಗಿದೆ.
3
+ ಆಪಾದಿತ ಅಬಕಾರಿ ನೀತಿ ಹಗರಣದಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಡಿರುವ ಮನವಿಯ ಅರ್ಜಿ ವಿಚಾರಣೆಯನ್ನು ಏ.29ರ ನಂತರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿರುವುದರಿಂದ ಕೇಜ್ರಿ ಅವರು ಏ.29ರವರೆಗೆ ಜೈಲಿನಲ್ಲೇ ಇರಬೇಕಾಗುತ್ತದೆ.
4
+ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಈ ಕುರಿತಂತೆ ಜಾರಿ ನಿರ್ದೇಶನಾಲಯದಿಂದ ಪ್ರತಿಕ್ರಿಯೆ ಕೇಳಿದೆ. ಕೇಜ್ರಿವಾಲ್ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಇಡಿಗೆ ನೋಟಿಸ್ ಜಾರಿ ಮಾಡಿ, ಏಪ್ರಿಲ್ 24 ರೊಳಗೆ ಅರ್ಜಿಗೆ ಉತ್ತರಿಸುವಂತೆ ಸೂಚಿಸಿದೆ ಮತ್ತು ಏಪ್ರಿಲ್ 29 ರಿಂದ ಪ್ರಾರಂಭವಾಗುವ ವಾರದಲ್ಲಿ ಈ ವಿಷಯದ ವಿಚಾರಣೆ ನಡೆಯಲಿದೆ ಎಂದು ಹೇಳಿದರು.
5
+ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರ ಬಂಧನವನ್ನು ಹೈಕೋರ್ಟ್ ಏಪ್ರಿಲ್ 9 ರಂದು ಎತ್ತಿಹಿಡಿದಿತ್ತು. ಅವರು ಪುನರಾವರ್ತಿತ ಸಮನ್ಸ್ಗಳನ್ನು ಬಿಟ್ಟು ತನಿಖೆಗೆ ಸೇರಲು ನಿರಾಕರಿಸಿದ ನಂತರ ಇಡಿಗೆ ಸಣ್ಣ ಆಯ್ಕೆ ಉಳಿದಿದೆ ಎಂದು ಹೇಳಿದರು. ಇಡಿ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದ ಕಾರಣ ಅವರು ಏಜೆನ್ಸಿ ಕಸ್ಟಡಿಯಲ್ಲಿದ್ದಾರೆ.
6
+ ಫೆಡರಲ್ ಆಂಟಿ ಮನಿ ಲಾಂಡರಿಂಗ್ ಏಜೆನ್ಸಿಯ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಗಂಟೆಗಳ ನಂತರ, ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತು. ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.
eesanje/url_46_179_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಚುನಾವಣೆ ಘೋಷಣೆಯಾದಾಗಿನಿಂದ ರಾಜ್ಯದಲ್ಲಿ 158.94 ಕೋಟಿ ರೂ. ಮೊತ್ತದ ಮದ್ಯ ವಶ
2
+ ಬೆಂಗಳೂರು,ಏ.15-ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಡೆಸಿದ ತಪಾಸಣೆ ಸಂದರ್ಭದಲ್ಲಿ ಭಾರೀ ಪ್ರಮಾಣದ ಮದ್ಯ ಪತ್ತೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಂದಿನಿಂದ ನಿನ್ನೆಯವರೆಗೆ 158.94 ಕೋಟಿ ರೂ. ಮೊತ್ತದ 142.32 ಲಕ್ಷ ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ.
3
+ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ಪ್ರಕಾರ, ಅಬಕಾರಿ ಇಲಾಖೆಯವರು 23.46 ಲಕ್ಷ ರೂ. ಮೌಲ್ಯದ 1,150 ಕೇಸ್ ಪೆಟ್ಟಿಗೆಗಳ 8,970 ಲೀಟರ್ ಮದ್ಯವನ್ನು ಕೊತ್ತನೂರು ಕಮ್ಮಸಂದ್ರ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. 49.88 ಲಕ್ಷ ರೂ. ಮೌಲ್ಯದ 1,155 ಕೇಸ್ ಪೆಟ್ಟಿಗೆಗಳ 9,108 ಲೀಟರ್ ಮದ್ಯವನ್ನು ಕೆ.ಜಿ.ಹಳ್ಳಿಯಲ್ಲಿ ಹಾಗೂ 46.14 ಲಕ್ಷ ರೂ. ಮೌಲ್ಯದ 13,800 ಲೀಟರ್ ಬಿಯರ್ ಅನ್ನು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಳ್ಳಲಾಗಿದೆ.
4
+ 89.25 ಲಕ್ಷ ಮೌಲ್ಯದ 1,186.200 ಲೀಟರ್ ಮದ್ಯವನ್ನು ಕಾಡುಗೊಂಡನಹಳ್ಳಿಯಲ್ಲಿ 55.62 ಲಕ್ಷ ರೂ.ಮೌಲ್ಯದ 7,386.120 ಲೀಟರ್ ಮದ್ಯವನ್ನು ದೊಡ್ಡಕಮ್ಮನಹಳ್ಳಿಯಲ್ಲಿ ಜಪ್ತಿ ಮಾಡಲಾಗಿದೆ.
5
+ ಅದೇ ರೀತಿ 76.86 ಲಕ್ಷ ರೂ. ಮೌಲ್ಯದ 4,811.400 ಲೀಟರ್ ಮದ್ಯವನ್ನು ಕೋಲಾರ ಟೌನ್‍ನ ತಮಕಾ ಕೈಗಾರಿಕಾ ಪ್ರದೇಶದಲ್ಲಿ, 59 ಲಕ್ಷ ಮೌಲ್ಯದ 14,688 ಲೀಟರ್ ಮದ್ಯವನ್ನು ಬಾಗಲಕೋಟೆಯಲ್ಲಿ ವಶಪಡಿಸಿಕೊಳ್ಳಲಾಗಿದೆ.
6
+ 34.02 ಲಕ್ಷ ಮೌಲ್ಯದ 9,108 ಲೀಟರ್ ಮದ್ಯವನ್ನು ಕೂಡ್ಲುಗೇಟ್‍ನಲ್ಲಿ 49.88 ಲಕ್ಷ ಮೌಲ್ಯದ 9,108 ಲೀಟರ್ ಮದ್ಯವನ್ನು ವೈಟ್‍ಫೀಲ್ಡ್‍ನಲ್ಲಿ 27.43 ಲಕ್ಷ ರೂ. ಮೌಲ್ಯದ 8,970 ಲೀಟರ್ ಮದ್ಯವನ್ನು ವೈಟ್‍ಫೀಲ್ಡ್ ಹಾಗೂ 46.14 ಲಕ್ಷ ರೂ. ಮೌಲ್ಯದ 13,800 ಲೀಟರ್ ಮದ್ಯವನ್ನು ಮಾದನಾಯಕನಹಳ್ಳಿಯಲ್ಲಿ ಅಬಕಾರಿ ಇಲಾಖೆಯವರು ವಶಪಡಿಸಿಕೊಂಡಿದ್ದಾರೆ.
7
+ 27.43 ಲಕ್ಷ ರೂ. ಮೌಲ್ಯದ 8,970 ಲೀಟರ್ ಮದ್ಯವನ್ನು ಸಂಜಯನಗರದಲ್ಲಿ ವಶಪಡಿಸಿಕೊಳ್ಳಲಾಗಿದೆ. ಕ್ಷಿಪ್ರಪಡೆಯವರು 1,34,92,800 ರೂ. ನಗದನ್ನು ಜಯನಗರದಲ್ಲಿ ವಶಪಡಿಸಿಕೊಂಡಿದ್ದು, ಬೇಗೂರು ಪೊಲೀಸ್ ಠಾಣೆ ತಂಡದವರು 10 ಲಕ್ಷ ರೂ. ಮೌಲ್ಯದ 5.557 ಕೆ.ಜಿ. ಗಾಂಜಾವನ್ನು ಬೇಗೂರಿನಲ್ಲಿ ವಶಪಡಿಸಿಕೊಂಡಿದ್ದಾರೆ.
8
+ ಕೋಲಾರದ ಸಿಇಎನ್ ಪೊಲೀಸ್ ಠಾಣೆ ತಂಡದವರು 10 ಲಕ್ಷ ರೂ. ಮೌಲ್ಯದ 10.140 ಕೆ.ಜಿ. ಗಾಂಜಾವನ್ನು ಕೋಲಾರದಲ್ಲಿ ವಶಪಡಿಸಿಕೊಂಡಿದ್ದಾರೆ.ಕ್ಷಿಪ್ರಪಡೆಯವರು 20 ಲಕ್ಷ ರೂ. ನಗದನ್ನು ರಾಬರ್ಟ್‍ಸನ್ ಪೇಟೆಯಲ್ಲಿ ಹಾಗೂ ಸ್ಥಿರ ಕಣ್ಗಾವಲು ತಂಡದವರು 12,049 ರೂ. ನಗದನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಕೋಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಂಡಿದ್ದಾರೆಂದು ಪ್ರಕಟಣೆ ತಿಳಿಸಿದೆ.
9
+ ರಾಜ್ಯದಲ್ಲಿ ಇದುವರೆಗೂ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿ ವಶಪಡಿಸಿಕೊಂಡ ನಗದು, ಮದ್ಯ, ಚಿನ್ನ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳ ಮೌಲ್ಯ 355.78 ಕೋಟಿ ರೂ.ಗೆ ಏರಿಕೆಯಾಗಿದೆ.
10
+ ಇದರಲ್ಲಿ ಪೊಲೀಸ್ ಕ್ಷಿಪ್ರಪಡೆಗಳು, ಸ್ಥ���ರ ಕಣ್ಗಾವಲು ತಂಡಗಳು 104.10 ಕೋಟಿ ರೂ.ಮೊತ್ತದ ನಗದು, ಮದ್ಯ, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದಾರೆ. ಅಬಕಾರಿ ಇಲಾಖೆಯವರು 158.58 ಕೋಟಿ ರೂ. ಮೌಲ್ಯದ ಮದ್ಯ ಮತ್ತು ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯವರು 13.60 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ, ವಜ್ರವನ್ನು ವಶಪಡಿಸಿಕೊಂಡಿದ್ದಾರೆ.
11
+ ವಾಣಿಜ್ಯ ತೆರಿಗೆ ಇಲಾಖೆಯವರು 79.50 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇದುವರೆಗೂ 1,707 ಎಫ್‍ಐಆರ್‍ಗಳನ್ನು ದಾಖಲಿಸಿದ್ದು, ವಿವಿಧ ಪ್ರಕರಣಗಳಡಿ 1,349 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
eesanje/url_46_179_10.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಅಂಬೇಡ್ಕರ್ ಮತ್ತೆ ಹುಟ್ಟಿಬಂದರೂ ಸಂವಿಧಾನ ಬದಲಿಸಲಾಗಲ್ಲ ಎಂಬ ಮೋದಿ ಹೇಳಿಕೆಗೆ ಸಿದ್ದು ಕೌಂಟರ್
2
+ ಬೆಂಗಳೂರು,ಏ.14-ಡಾ.ಬಿ.ಆರ್.ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, ಯಾವ ಆರ್‍ಎಸ್‍ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ ಎಂಬುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
3
+ ಸಾಮಾಜಿಕ ಜಾಲಾತಾಣದಲ್ಲಿ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿಯವರು, ಪ್ರಧಾನಿ ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ, ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃಸಂಸ್ಥೆಯಾದ ಆರ್‍ಎಸ್‍ಎಸ್ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್ ಎಂದು ಹೇಳಿದ್ದಾರೆ.
4
+ ಆರ್‍ಎಸ್ ಎಸ್ ಮುಖವಾಣಿಯಾದ ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದ ಸಾಲುಗಳಲ್ಲಿ, ಭಾರತ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ ಏನಂದರೆ, ಅದರಲ್ಲಿ ಭಾರತೀಯತೆ ಎನ್ನುವುದೇ ಇಲ್ಲ, ಪುರಾತನ ಭಾರತದ ಕಾನೂನು-ಕಟ್ಟಳೆಗಳಾಗಲಿ, ಸಂರಚನೆಗಳಾಗಲಿ, ನುಡಿಗಟ್ಟುಗಳಾಗಲಿ ಯಾವುದೂ ಇಲ್ಲ. ಸ್ವಾರ್ಥದ ಲೈಕುರ್ಗಸ್ ಅಥವಾ ಪರ್ಸಿಯಾದ ಸೊಲೊನ್ ಬರೆಯುವುದಕ್ಕು ಮೊದಲೇ ಮನು ಈ ನಿಯಮಗಳನ್ನು ಇಲ್ಲಿ ರಚಿಸಿದ್ದರು.
5
+ “ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ – ಸಂಪ್ರದಾಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. ಇವತ್ತಿಗೂ ಕೋಟ್ಯಂತರ ಹಿಂದೂಗಳು…../6tKlRwfvYO
6
+ ಇಂದಿಗೂ ಮನುಸಂಸ್ಮತಿಯಲ್ಲಿ ಮನು ಉಲ್ಲೇಖಿಸಿರುವ ಕಾನೂನುಗಳು ಪ್ರಪಂಚದ ಗೌರವಕ್ಕೆ ಪಾತ್ರವಾಗಿವೆ ಮತ್ತು ಸ್ವಾಭಾವಿಕ ವಿಧೇಯತೆ ಮತ್ತು ಅನುಸರಣೆಯಲ್ಲಿವೆ. ಆದರೆ ನಮ್ಮ ಸಂವಿಧಾನವನ್ನು ರಚಿಸಿದ ಪಂಡಿತರಿಗೆ ಇದ್ಯಾವುದೂ ಲೆಕ್ಕಕ್ಕಿಲ್ಲ ಎಂದು ಟೀಕಿಸಲಾಗಿತ್ತು. ಪ್ರಧಾನಿಯವರು ಇದನ್ನು ಒಪ್ಪುತ್ತಾರೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
7
+ ಪ್ರಧಾನಿಯವರು ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನಾ ಸಮಿತಿ ನೀಡಿದ ಕರಡು ಪ್ರತಿಯನ್ನು ನಮ್ಮ ದೇಶ ಅಂಗೀಕರಿಸಿದ್ದು 1949ರ ನವಂಬರ್ 26ರಂದು. ಅದಾಗಿ ಕೇವಲ ನಾಲ್ಕೇ ದಿನಕ್ಕೆ ಅಂದರೆ 1949ರ ನವಂಬರ್ 30ರಂದು ನಿಮ್ಮ ಮಾತೃಸಂಸ್ಥೆಯಾದ ಆರ್‍ಎಸ್‍ಎಸ್ ಬರೆದಿರುವ ಈ ಸಂಪಾದಕೀಯದ ಬಗ್ಗೆ ಈಗಿನ ನಿಮ್ಮ ನಿಲುವು ಏನು? ಸಂಪಾದಕೀಯದ ಅಭ್ರಿಪ್ರಾಯಗಳನ���ನು ನಿರಾಕರಿಸುತ್ತೀರಾ ಎಂದು ಪ್ರಧಾನಿಯವರಿಗೆ ಮುಖ್ಯಮಂತ್ರಿ ಸವಾಲೆಸೆದಿದ್ದಾರೆ.
8
+ ಆರ್‍ಎಸ್‍ಎಸ್‍ನ ಸಂಸ್ಥಾಪಕರಲ್ಲಿ ಒಬ್ಬರಾದ ಎಂ.ಎಸ್.ಗೋಳ್ವಾಲ್ಕರ್, ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆಬೇರೆ ಕಲಮ್ಮುಗಳನ್ನು ಹೆಕ್ಕಿ ತಂದು ಒಟ್ಟುಗೂಡಿಸಿದ ಕಂತೆಯಾಗಿದ್ದು, ಇದರಲ್ಲಿ ಹಲವಾರು ತೊಡಕುಗಳು ಮತ್ತು ಭಿನ್ನ ನಿಲುವುಗಳು ಎದ್ದು ಕಾಣುತ್ತವೆ. ನಮ್ಮದು ಎಂದು ಕರೆದುಕೊಳ್ಳುವ ಯಾವ ಭಾರತೀಯ ಅಂಶವೂ ಇದರಲ್ಲಿಲ್ಲ. ನಮ್ಮ ರಾಷ್ಟ್ರೀಯ ಕಾರ್ಯಯೋಜನೆ ಏನು ಮತ್ತು ನಮ್ಮ ಬದುಕಿನ ಮುಖ್ಯ ಧಾತುವೇನು ಎಂಬುದರ ಬಗ್ಗೆ ಇದರ ನಿರ್ದೇಶಕ ತತ್ವಗಳಲ್ಲಿ ಒಂದೇ ಒಂದು ಪದವಿದೆಯೇ? ಎಂದು ಪ್ರಶ್ನಿಸಿದರು.
9
+ ಗೋಳ್ವಾಲ್ಕರ್‌ರನ್ನು ಗುರೂಜಿ ಎಂದೇ ಗೌರವಿಸುವ ಪ್ರಧಾನಿಯವರು ಈವರೆಗೂ ಅವರ ಅಭಿಪ್ರಾಯಗಳಿಗೆ ಸಹಮತ ಇದೆಯೇ ಅಥವಾ ಭಿನ್ನಮತ ಇದೆಯೇ ಎಂದು ಸ್ಪಷ್ಟಪಡಿಸಿಲ್ಲ. ಇನ್ನೂ ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ರತಿಮ ದೇಶಭಕ್ತ ಎಂದು ಬಿಂಬಿಸಲಾದ ವಿನಾಯಕ ದಾಮೋದರ ಸಾವರ್ಕರ್ ಅವರ ಪುಸ್ತಕದಲ್ಲಿ ಸಂವಿಧಾನದ ಬಗ್ಗೆ ಸ್ಪಷ್ಟ ಉಲ್ಲೇಖವಿದೆ.
10
+ ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕøತಿ – ಸಂಪ್ರಾದಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ.
11
+ ಇಂದಿಗೂ ಕೋಟ್ಯಂತರ ಹಿಂದೂಗಳು ತಮ್ಮ ಜೀವನ ಮತ್ತು ಆಚರಣೆಗಳಲ್ಲಿ ಅನುಸರಿಸುತ್ತಿರುವ ಕಟ್ಟಳೆಗಳಿಗೆ ಈ ಮನುಸ್ಮೃತಿಯೇ ಮೂಲವಾಗಿದೆ. ಇವತ್ತು ಮನುಸ್ಮೃತಿಯೇ ಹಿಂದೂ ಕಾನೂನು ಎಂದು ಹೇಳಿದ್ದಾರೆ. ಇದಕ್ಕೆ ಪ್ರಧಾನಿಯವರ ಸಹಮತ ಇದೆಯೇ ಇಲ್ಲವೇ ಎಂಬುದನ್ನು ದೇಶದ ಜನರ ಮುಂದೆ ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ.
12
+ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹುಟ್ಟಿರದೆ ಇದ್ದರೆ ಭಾರತ ಏನಾಗಿರುತ್ತಿತ್ತು ಎನ್ನುವುದನ್ನು ಒಂದು ಕ್ಷಣ ಕಲ್ಪಿಸಿಕೊಂಡರೆ ನಮ್ಮೆಲ್ಲರ ಬದುಕಿನಲ್ಲಿ ಅವರ ಪಾತ್ರದ ಅರಿವಾಗಬಹುದು. ಈ ಕಾರಣಕ್ಕಾಗಿ ಜಾತಿ, ಧರ್ಮ, ಪಂಥ, ಪ್ರದೇಶವನ್ನು ಮೀರಿ ಭಾರತದ ನೆಲದಲ್ಲಿ ಹುಟ್ಟಿದವರು ಮತ್ತು ಹುಟ್ಟಲಿರುವವರೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಋಣಿಗಳಾಗಿರಬೇಕು ಎಂದು ಸಲಹೆ ನೀಡಿದ್ದಾರೆ.
eesanje/url_46_179_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಲೋಕಸಭೆ ಚುನಾವಣೆ ಬಳಿಕ ‘ಗ್ಯಾರಂಟಿ’ ಸರ್ಕಾರದ ಪತನದ ಸುಳಿವು ನೀಡಿದ ರಮೇಶ್ ಜಾರಕಿಹೊಳಿ
2
+ ಬೆಂಗಳೂರು,ಏ.14-ಲೋಕಸಭಾ ಚುನಾವಣೆ ಬಳಿಕ ಡಬ್ಬಲ್ ಇಂಜಿನ್ ಸರ್ಕಾರ ಬರಲಿದೆ ಎಂದು ಹೇಳುವ ಮೂಲಕ ಬಿಜೆಪಿಯ ಶಾಸಕ ರಮೇಶ್ ಜಾರಕಿಹೊಳಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಪತನದ ಎಚ್ಚರಿಕೆ ನೀಡಿರುವುದು ರಾಜಕೀಯವಾಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಶಾಸಕರನ್ನು ಖರೀದಿಸಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರಗಳನ್ನು ಪತನಗೊಳಿಸುವುದನ್ನು ಮುಂದುವರೆಸಲಿದೆ ಎಂದು ಬಿಜೆಪಿಯೇತರ ಪಕ್ಷಗಳು ಮೊದಲಿನಿಂದಲೂ ಆರೋಪಿಸುತ್ತಲೇ ಇವೆ.
3
+ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 135 ಸ್ವಂತ ಶಾಸಕರು ಹಾಗೂ ಮೂವರು ಪಕ್ಷೇತರರು ಸೇರಿ 138 ಸಂಖ್ಯಾಬಲವನ್ನು ಹೊಂದಿದೆ. ಬಹುಮತಕ್ಕೆ ಸಾಮಾನ್ಯ ಸಂಖ್ಯೆಗಿಂತಲೂ ಹೆಚ್ಚು ಶಾಸಕರನ್ನು ಹೊಂದಿರುವ ಸರ್ಕಾರವನ್ನು ಪತನಗೊಳಿಸುವುದು ಪ್ರಜಾಪ್ರಭುತ್ವದ ವಿರೋಧಿ ಕೃತ್ಯವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸುತ್ತಲೇ ಇದ್ದಾರೆ.
4
+ ಅದನ್ನು ಮೀರಿ ಪದೇಪದೇ ರಾಜ್ಯಸರ್ಕಾರದ ಪತನದ ಬಗ್ಗೆ ಚರ್ಚೆಗಳಾಗುತ್ತಿವೆ. ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಮತಯಾಚನೆ ಮಾಡಿದ್ದ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಮುಂದಿನ 5 ವರ್ಷ ನಿಮ್ಮ ಸೇವೆಗೆ ನಾವು ಲಭ್ಯವಿದ್ದೇವೆ. ದೆಹಲಿಯ ನಾಯಕರು ಬಂದು ನಿಮ್ಮ ಕೆಲಸ ಮಾಡಿಕೊಡುವುದಿಲ್ಲ. ನಾವೇ ನಿಮ್ಮ ಕೆಲಸ ಮಾಡಿಕೊಡಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಒತ್ತಡ ಹೇರಿದ್ದರು.
5
+ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಇರುವುದಿಲ್ಲ, ಕೇಂದ್ರದಲ್ಲೂ ಬಿಜೆಪಿ, ರಾಜ್ಯದಲ್ಲೂ ಬಿಜೆಪಿ ಸರ್ಕಾರಗಳು ಅಧಿಕಾರಕ್ಕೆ ಬರಲಿದೆ ಎಂದು ಪ್ರತಿಪಾದಿಸುವ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡುತ್ತಿದ್ದಾರೆ. ಪರಸ್ಪರ ಸರ್ಕಾರದ ಅಸ್ತಿತ್ವದ ಬಗ್ಗೆ ಅನುಮಾನ ಹುಟ್ಟುವಂತಹ ಚರ್ಚೆಗಳು ಜನರಲ್ಲಿ ಗೊಂದಲ ಮೂಡಿಸುತ್ತಿವೆ.
6
+ ಬಿಜೆಪಿ ಕೇಂದ್ರದಲ್ಲಿ ಮರಳಿ ಅಧಿಕಾರ ಹಿಡಿದಿದ್ದೇ ಆದರೆ ಬಿಜೆಪಿಯೇತರ ಆಡಳಿತ ಇರುವ ರಾಜ್ಯಗಳಲ್ಲಿ ಆಪರೇಷನ್ ಕಮಲ ಜೋರಾಗಲಿದೆ. ಕಾಂಗ್ರೆಸ್ ಶಾಸಕರನ್ನು ಸೆಳೆದು ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂಬ ಚರ್ಚೆಗಳು ಚಾಲ್ತಿಯಲ್ಲಿವೆ.
7
+ ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶ ಸೇರಿದಂತೆ ಮೂರು ರಾಜ್ಯಗಳಲ್ಲಿ ಮಾತ್ರ ಸ್ವಂತಬಲದ ಮೇಲೆ ಅಧಿಕಾರದಲ್ಲಿದೆ. ಉಳಿದಂತೆ ತಮಿಳುನಾಡು, ಜಾರ್ಖಾಂಡ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಪಾಲುದಾರ ಪಕ್ಷವಾಗಿದೆ.
8
+ ಬಿಜೆಪಿ ಈ ಮೊದಲು ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸದೃಢ ಸರ್ಕಾರಗಳನ್ನೇ ಆಪರೇಷನ್ ಕಮಲದ ಮೂಲಕ ಪತನಗೊಳಿಸಿತ್ತು. ಮುಂದುವರೆದು ಮತ್ತೆ ಅಧಿಕಾರಕ್ಕೆ ಬಂದರೆ ಅದೇ ಮಾದರಿಯ ಕಾರ್ಯಾಚರಣೆ ನಡೆಯಬಹುದು. ಬಿಜೆಪಿಯೇತರ ಸರ್ಕಾರಗಳು ಪತನಗೊಳ್ಳಬಹುದು ಎಂಬ ಆತಂಕ ಒಳಗೊಳಗೆ ಇದ್ದೇ ಇದೆ.
9
+ ಅದಕ್ಕೆ ಪೂರಕವಾಗಿ ಬಿಜೆಪಿ ನಾಯಕರು ಡಬ್ಬಲ್ ಇಂಜಿನ್ ಸರ್ಕಾರದ ಪ್ರಸ್ತಾಪ ಮಾಡುತ್ತಾ ಆಪರೇಷನ್ ಕಮಲವನ್ನು ಮತ್ತಷ್ಟು ವೈಭವೀಕರಿಸುತ್ತಿದ್ದಾರೆ. ಅದರಲ್ಲೂ 2019 ರಲ್ಲಿ ಕರ್ನಾಟಕದಲ್ಲಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ ಆಪರೇಷನ್ ಕಮಲದ ರೂವಾರಿ ರಮೇಶ್ ಜಾರಕಿಹೊಳಿ ಡಬ್ಬಲ್ ಇಂಜಿನ್ ಸರ್ಕಾರದ ಪ್ರಸ್ತಾಪ ಮಾಡಿರುವುದು ಕುತೂಹಲ ಕೆರಳಿಸಿದೆ.
eesanje/url_46_179_12.txt ADDED
@@ -0,0 +1,8 @@
 
 
 
 
 
 
 
 
 
1
+ ಭಾನುವಾರವೂ ಬಿಡುವಿಲ್ಲದೆ ರಾಜಕೀಯ ನಾಯಕರ ಮತಬೇಟೆ
2
+ ಬೆಂಗಳೂರು,ಏ.14-ಲೋಕಸಭಾ ಚುನಾವಣೆಯ ಕಣ ರಂಗೇರುತ್ತಿದ್ದು, ಘಟಾನುಘಟಿ ನಾಯಕರು ರಂಗ ಪ್ರವೇಶ ಮಾಡಿ ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದ್ದಾರೆ. ಭಾನುವಾರ ರಜಾದಿನವಾದರೂ ಕೂಡ ಲೆಕ್ಕಿಸದೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರು ಹಲವಾರು ಕಡೆ ಬಹಿರಂಗ ಸಮಾವೇಶ, ರೋಡ್ ಶೋಗಳಲ್ಲಿ ತೊಡಗಿಸಿಕೊಂಡಿದ್ದಾರೆ.
3
+ ಲೋಕಸಭಾ ಚುನಾವಣೆ ಘೋಷಣೆ ಬಳಿಕ ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮೈಸೂರಿನಲ್ಲಿ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿದ್ದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.
4
+ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮತಯಾಚನೆ ಮಾಡಿದರು. ಬಳಿಕ ಮಂಗಳೂರಿಗೆ ತೆರಳಿ ರೋಡ್ ಶೋ ನಡೆಸಿದರು. ಇತ್ತ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗು, ತುಮಕೂರು ಮತ್ತು ಮೈಸೂರು ಜಿಲ್ಲೆಗಳ ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
5
+ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದ್ದು, ಕೊಡಗು, ತುಮಕೂರು ಜಿಲ್ಲೆಗಳ ಬಹಿರಂಗ ಸಮಾವೇಶಗಳಲ್ಲಿ ಭಾಗಿಯಾಗಿದ್ದರು. ಇಬ್ಬರೂ ನಾಯಕರು ಹೆಲಿಕಾಪ್ಟರ್‍ನಲ್ಲಿ ಮಿಂಚಿನ ವೇಗದಲ್ಲಿ ಸಂಚಾರ ನಡೆಸಿದ್ದಾರೆ. ಮಡಿಕೇರಿಯಿಂದ ತುಮಕೂರಿನ ಕೆ.ಬಿ.ಕ್ರಾಸ್‍ಗೆ, ತುಮಕೂರಿನಿಂದ ಮೈಸೂರಿಗೆ ಕಾಂಗ್ರೆಸ್ ನಾಯಕರನ್ನು ಹೊತ್ತ ಹೆಲಿಕಾಪ್ಟರ್ ಸಂಚಾರ ನಡೆಸಿದೆ.
6
+ ರಾತ್ರಿ ಡಿ.ಕೆ.ಶಿವಕುಮಾರ್ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ತೆರಳಲಿದ್ದಾರೆ. ನಾಳೆ ಜಿದ್ದಾಜಿದ್ದಿನ ರಣಕಣವಾಗಿರುವ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ರಣಕಹಳೆ ಊದಲಿದ್ದಾರೆ.
7
+ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ 10 ದಿನಗಳು ಮಾತ್ರ ಉಳಿದಿವೆ. ಮೊದಲ ಹಂತದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರ ಓಲೈಕೆಗೆ ಉರಿಬಿಸಿಲಿನಲ್ಲೂ ನಾಯಕರು ಬೆವರಿಳಿಸುತ್ತಿದ್ದಾರೆ. ಅಭ್ಯರ್ಥಿಗಳು ಮನೆಮನೆ ಪ್ರಚಾರ, ರೋಡ್‍ಶೋಗಳಲ್ಲಿ ಮತಯಾಚನೆ ನಡೆಸುತ್ತಿದ್ದಾರೆ.
8
+ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ.ಅವಧಿ ಕಡಿಮೆ ಇರುವುದರಿಂದಾಗಿ ರಾಜ್ಯ, ರಾಷ್ಟ್ರೀಯ ನಾಯಕರು, ಸ್ಟಾರ್ ಪ್ರಚಾರಕರು ಹಗಲಿರುಳೆನ್ನದೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ���ದಾರೆ.
eesanje/url_46_179_2.txt ADDED
@@ -0,0 +1,7 @@
 
 
 
 
 
 
 
 
1
+ ಕುಮಾರಸ್ವಾಮಿ ಕ್ಷಮೆ ಕೇಳಿದ ಬಳಿಕವೂ ನಿಲ್ಲದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
2
+ ಬೆಂಗಳೂರು,ಏ.15-ದಾರಿ ತಪ್ಪಿದ ಹೇಳಿಕೆಗೆ ಕ್ಷಮೆ ಕೇಳಿದ ಬಳಿಕವೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದ್ದಾರೆ.ಲೋಕಸಭಾ ಚುನಾವಣೆಯ ಅಖಾಡದಲ್ಲಿ ಕುಮಾರಸ್ವಾಮಿಯವರ ಹೇಳಿಕೆ ಕಾಂಗ್ರೆಸ್‍ಗೆ ಅಸ್ತ್ರವಾಗಿ ಪರಿಣಮಿಸಿದೆ. ಇದನ್ನೇ ಮುಂದಿಟ್ಟುಕೊಂಡು ರಾಜ್ಯಾದ್ಯಂತ ತಾಲ್ಲೂಕು ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.
3
+ ಜಿಲ್ಲಾಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಜಿಲ್ಲಾಕಾರಿಗಳ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.ತಮ್ಮ ಹೇಳಿಕೆಯಿಂದಾದ ಅಚಾತುರ್ಯವನ್ನು ಸರಿಪಡಿಸಲು ನಿನ್ನೆಯಿಂದಲೂ ಎಚ್.ಡಿ.ಕುಮಾರಸ್ವಾಮಿ ಪದೇಪದೇ ಸ್ಪಷ್ಟ ನಿಲುವನ್ನು ನೀಡುತ್ತಿದ್ದಾರೆ. ಇಂದು ಬೆಳಿಗ್ಗೆ ತುರ್ತು ಪತ್ರಿಕಾಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೂ ಕಾಂಗ್ರೆಸ್ ಪ್ರತಿಭಟನೆ ಮುಂದುವರೆಸಿದೆ.
4
+ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆನ್‍ಲೈನ್‍ನಲ್ಲಿ ಸಭೆ ನಡೆಸಿ ಪಂಚಖಾತ್ರಿ ಯೋಜನೆಗಳ ಮಹಿಳಾ ಫಲಾನುಭವಿಗಳು ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ.ಕ್ಷಮಾಪಣೆ, ವಿಷಾದದಂತಹ ನಾಟಕಗಳನ್ನು ನಾವು ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ಮಹಿಳೆಯರು ಪ್ರತಿಭಟನೆ ಮುಂದುವರೆಸಲಿದ್ದಾರೆ. ಶ್ರೀಸಾಮಾನ್ಯರಿಗೆ ಕುಮಾರಸ್ವಾಮಿಯವರ ಮನೋಭಾವವನ್ನು ಅರ್ಥ ಮಾಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಬೆಳಗಾವಿಯಲ್ಲಿಂದು ಹೇಳಿದ್ದಾರೆ.
5
+ ದಾರಿ ತಪ್ಪಿದ ಹೇಳಿಕೆ ರಾಜಕೀಯ ಅಖಾಡದಲ್ಲಿ ಭಾರೀ ಸದ್ದು ಮಾಡುತ್ತಿದೆ. ಪಂಚಖಾತ್ರಿ ಯೋಜನೆಗಳ ಮಹತ್ವವನ್ನು ತಗ್ಗಿಸಲು ಕುಮಾರಸ್ವಾಮಿ ನೀಡಿದ್ದ ಹೇಳಿಕೆ ತಿರುಗುಬಾಣವಾಗಿ ಪರಿಣಮಿಸಿದೆ.ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಿಳೆಯರ ವಿಷಯವಾಗಿ ಉಗ್ರವಾಗಿ ಮಾತನಾಡಿದ್ದಾರೆ ಎಂಬ ಅಭಿಪ್ರಾಯವನ್ನು ದೃಢವಾಗಿ ಶ್ರೀಸಾಮಾನ್ಯರಿಗೆ ಅರ್ಥೈಸಲು ಕಾಂಗ್ರೆಸ್ ನಿರ್ಧರಿಸಿದೆ.
6
+ ಲೋಕಸಭಾ ಚುನಾವಣಾ ಅಖಾಡದಲ್ಲಿ ಬಿಜೆಪಿಯ ಎಲ್ಲಾ ನಾಯಕರನ್ನೂ ಓವರ್‍ಟೇಕ್ ಮಾಡಿ ಅತ್ಯಂತ ಪ್ರಭಾವಿಯಾಗಿ ಹೊರಹೊಮ್ಮಿದ್ದ ಕುಮಾರಸ್ವಾಮಿ ಶಕ್ತಿ ಕೇಂದ್ರವಾಗಿ ಬಿಂಬಿತವಾಗಿದ್ದರು. ಹಳೆಯ ಮೈಸೂರು ಭಾಗದಲ್ಲಿ ಓಟ್ ಬ್ಯಾಂಕ್ ಗಿಟ್ಟಿಸುವಲ್ಲಿ ಕುಮಾರಸ್ವಾಮಿ ಪಾತ್ರ ಮಹತ್ವದ್ದು ಎಂದು ವಿಶ್ಲೇಷಣೆ ನಡೆದಿತ್ತು.
7
+ ಆದರೆ ಬಾಯಿ ತಪ್ಪಿದ ಮಾತುಗಳು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಕಾಂಗ್ರೆಸ್ ಪಕ್ಷ ಹೆಜ್ಜೆಹೆಜ್ಜೆಗೂ ಬಳಸಿಕೊಂಡು ತೀವ್ರ ವಾಗ್ದಾಳಿಗಿಳ���ದಿದೆ. ರಾಜ್ಯದಲ್ಲಿ ಮಹಿಳಾ ಮತದಾರರ ಪ್ರಮಾಣ ಶೇ.50 ರಷ್ಟಿದ್ದು, ನಿರ್ಣಾಯಕರಾಗಿದ್ದಾರೆ. ಈಗಾಗಲೇ ಪಂಚಖಾತ್ರಿ ಯೋಜನೆಗಳಿಂದ ಕಾಂಗ್ರೆಸ್ ಪಕ್ಷ ಮಹಿಳಾ ಮತದಾರರ ಬೆಂಬಲವನ್ನು ಗಿಟ್ಟಿಸುವಲ್ಲಿ ಯಶಸ್ವಿಯಾಗಿತ್ತು. ಅದರ ನಡುವೆ ಮಹಿಳಾ ಮತದಾರರನ್ನು ಸೆಳೆಯಲು ಜೆಡಿಎಸ್ ಮತ್ತು ಬಿಜೆಪಿಯವರು ನಾನಾ ರೀತಿಯ ಸರ್ಕಸ್ ನಡೆಸುತ್ತಿದ್ದರು. ಈಗ ಕುಮಾರಸ್ವಾಮಿಯವರ ಹೇಳಿಕೆ ಸಾಕಷ್ಟು ಮುಜುಗರ ಉಂಟುಮಾಡಿದ್ದು, ಪರಿಸ್ಥಿತಿಯನ್ನು ಸರಿದೂಗಿಸಲು ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ.
eesanje/url_46_179_3.txt ADDED
@@ -0,0 +1,9 @@
 
 
 
 
 
 
 
 
 
 
1
+ ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ : ಎಚ್.ಡಿ.ಕುಮಾರಸ್ವಾಮಿ
2
+ ಬೆಂಗಳೂರು,ಏ.15-ತುರುವೇಕೆರೆಯಲ್ಲಿನ ಚುನಾವಣಾ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆಯಿಂದ ರಾಜ್ಯದ ಯಾವುದೇ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಜೆಡಿಎಸ್ ಮಹಿಳಾ ಮುಖಂಡರೊಂದಿಗೆ ತುರ್ತು ಸುದ್ದಿಗೋಷ್ಠಿಯನ್ನು ನಡೆಸಿದ ಅವರು, ಮಹಿಳೆಯರಿಗೆ ಅಗೌರವ ತರುವಂಥ ಮಾತನ್ನು ಆಡಿಲ್ಲ ಎಂದು ಸ್ಪಷ್ಟಪಡಿಸಿದರು.
3
+ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಾಲ ಮಾಡುತ್ತಿದ್ದಾರೆ. ಸಾಲದ ಹೊರೆ ನಾಡಿನ ಜನರ ಮೇಲೆ ಹೊರಿಸುತ್ತಿದ್ದಾರೆ. ತಾಯಂದಿರಿಗೆ 2 ಸಾವಿರ ರೂ. ನೀಡಿ ಅವರ ಯಜಮಾನರ ಜೇಬಿನಿಂದ ಪಿಕ್‍ಪ್ಯಾಕೇಟ್ ಮಾಡಿ ಐದಾರು ಸಾವಿರ ವಸೂಲಿ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ತಾಯಂದಿರು ಎಚ್ಚರಿಕೆಯಿಂದಿರಬೇಕು. ಗ್ಯಾರಂಟಿಗೆ ಮರುಳಾಗಿ ದಾರಿ ತಪ್ಪಬಾರದು ಎಂದು ಹೇಳಿದ್ದೇನೆಯೇ ಹೊರತು, ಅಗೌರವದಿಂದಲ್ಲ. ನಾನು ಬಳಸಿರುವ ಶಬ್ದದಲ್ಲಿ ಯಾವುದೇ ಅಶ್ಲೀಲತೆ ಇಲ್ಲ ಎಂದು ಸಮರ್ಥಿಸಿಕೊಂಡರು.
4
+ ಕಾಂಗ್ರೆಸ್ ಅಧ್ಯಕ್ಷರು, ಹಿರಿಯ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಕಾರಿಗಳು ನನ್ನ ಈ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡಿ ಮಹಿಳೆಯರ ಪರವಾಗಿ ಕಂಬನಿ ಮಿಡಿದಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದವರು ಮಹಿಳೆಯರ ಬಗ್ಗೆ ನೀಡಿರುವ ಅಗೌರವ ತರುವಂಥ ಹಲವು ಹೇಳಿಕೆಗಳ ನಿದರ್ಶನವನ್ನು ನೀಡಬಹುದು ಎಂದರು.
5
+ ಹೆಣ್ಣು ಮಕ್ಕಳನ್ನು ಬೆದರಿಸಿ, ಜಮೀನು ಬರೆಸಿಕೊಂಡಾಗ ದುಃಖ ಬರಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರ ಹೆಸರನ್ನು ಉಲ್ಲೇಖಿಸದೇ ವಾಗ್ದಾಳಿ ನಡೆಸಿದರು.ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರವರು ನಟಿ ಹೇಮಾಮಾಲಿನಿಯವರನ್ನು ಕುರಿತು ನೀಡಿರುವ ಹೇಳಿಕೆ ಮಹಿಳೆಯರಿಗೆ ಗೌರವ ತರುವಂಥದ್ದೇ ಎಂದು ಪ್ರಶ್ನಿಸಿದರು.
6
+ ಯಾವುದೇ ಆಮಿಷಕ್ಕೆ ಒಳಗಾಗದೇ ತಾಯಂದಿರ ಪರವಾಗಿ ಸಾರಾಯಿ ನಿಷೇಧವನ್ನು ನಾನು ಮುಖ್ಯಮಂತ್ರಿಯಾಗಿ ಮಾಡಿದ್ದೆ. ಕಾಂಗ್ರೆಸ್‍ನವರಿಗೆ ಟೀಕಿಸಲು ವಿಷಯವಿಲ್ಲದೆ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಕಾಂಗ್ರೆಸ್ ವಕ್ತಾರರು ದೆಹಲಿಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ನೀಡಿರುವ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ, ರಾಹುಲ್‍ಗಾಂಧಿ ಏನು ಹೇಳುತ್ತಾರೆ, ಅವರ ಹೇಳಿಕೆ ಹೆಣ್ಣು ಮಕ್ಕಳಿಗೆ ಗೌರವ ತರುವಂಥದ್ದೇ? ಎಂದು ವಾಗ್ದಾಳಿ ನಡೆಸಿದರು.
7
+ ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್‍ಕುಮಾರ್‍ರವರು ವಿಧಾನಸಭೆಯಲ್ಲಿ ಏನು ಹೇಳಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಲಿ, ಮದ್ದೂರಿನಲ್ಲಿ ಮಾಜಿ ಶಾಸಕರ ಬಗ್ಗೆ ಆ ಪಕ್ಷದ ಶಾಸಕರು ನೀಡಿರುವ ಹೇಳಿಕೆಗೆ ಸನ್ಮಾನ ಮಾಡಬೇಕೇ?, ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪನವರ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ���ಷರು ಕ್ಷಮೆ ಕೋರಿದ್ದಾರೆ. ಹೀಗೆ ಹಲವು ನಿದರ್ಶನವನ್ನು ಕಾಂಗ್ರೆಸ್‍ನವರು ಮಹಿಳೆಯ ಬಗ್ಗೆ ತೋರಿರುವ ಅಗೌರವದ ಬಗ್ಗೆ ನಿದರ್ಶನವಾಗಿ ನೀಡಬಹುದು ಎಂದರು.
8
+ ಈ ವಿಚಾರವನ್ನು ಮುಂದಿಟ್ಟುಕೊಂಡು ಜನರ ಮನಸ್ಸನ್ನು ಪರಿವರ್ತನೆ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್‍ನ ಮಹಿಳಾ ಪ್ರಾಧಧಿಕಾರಿಗಳಿಗೆ ಈ ವಿಚಾರದಲ್ಲಿ ನೋವುಂಟಾಗಿದೆ. ಅವರದೇ ಪಕ್ಷದವರು ನೀಡಿರುವ ಹೇಳಿಕೆಗಳ ಬಗ್ಗೆ ನೋವಾಗಲಿಲ್ಲವೇ ಎಂದು ಪ್ರಶ್ನಿಸಿದರು.ನಾನು ಕೂಡ ದಾರಿ ತಪ್ಪಿದಾಗ ನನ್ನ ಹೆಂಡತಿ ತಿದ್ದಿ ಸರಿದಾರಿಗೆ ತಂದಿರುವುದನ್ನು ವಿಧಾನಸಭೆಯಲ್ಲಿಯೇ ಪ್ರಸ್ತಾಪಿಸಿದ್ದೇನೆ. ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳಿಗೆ ನೋವು ಕೊಡಲು ಹೋಗಿಲ್ಲ ಎಂದರು.
9
+ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ನೋಟೀಸ್ ಕೊಟ್ಟರೆ ಸೂಕ್ತ ಉತ್ತರ ಕೊಡುತ್ತೇನೆ, ನಾನು ತಪ್ಪು ಮಾಡಿಲ್ಲ ಎಂದ ಮೇಲೆ ಹೆದರುವ ಅವಶ್ಯಕತೆಯೇ ಇಲ್ಲ ಎಂದು ಹೇಳಿದರು. ರಾಜಕೀಯಕ್ಕೆ ಬರುವ 10 ವರ್ಷ ಮುನ್ನವೇ ಆಸ್ತಿ ಮಾಡಿದ್ದೆ. ಆ ಆಸ್ತಿಯಲ್ಲಿ 20 ಟನ್ ಕೊಬ್ಬರಿ, 50 ಟನ್ ಕಲ್ಲಂಗಡಿ ಹಣ್ಣು, 50 ಲಕ್ಷ ಬಾಳೆ ಬೆಳೆದಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
eesanje/url_46_179_4.txt ADDED
@@ -0,0 +1,6 @@
 
 
 
 
 
 
 
1
+ ಇಸ್ರೇಲ್ ಹಡಗಿನಲ್ಲಿದ್ದ ಭಾರತೀಯರ ಬಿಡುಗಡೆಗೆ ಇರಾನ್ ಸಮ್ಮತಿ
2
+ ನವದೆಹಲಿ,ಏ.15-ಇರಾನ್ ವಶಪಡಿಸಿಕೊಂಡಿರುವ ಇಸ್ರೇಲ್ ಸಂಬಂಧಿತ ಸರಕು ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿಯನ್ನು ಭೇಟಿ ಮಾಡಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅನುಮತಿ ನೀಡಲಾಗುವುದು ಎಂದು ಇರಾನ್ ವಿದೇಶಾಂಗ ಸಚಿವಾಲಯ ಭರವಸೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಸಿಬ್ಬಂದಿಯ ಪರಿಸ್ಥಿತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಇರಾನ್ ಸಹವರ್ತಿ ಅಮೀರ್ ಅಬ್ದುಲ್ಲಾಹಿಯಾನ್ ಅವರಿಗೆ ಕರೆ ಮಾಡಿದ ನಂತರ ಈ ಭರವಸೆ ಬಂದಿದೆ.
3
+ ಜೈಶಂಕರ್ ಅವರು ಈ ವಿಷಯದಲ್ಲಿ ನೆರವು ಕೋರಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ವಶಪಡಿಸಿಕೊಂಡ ಹಡಗಿನ ವಿವರಗಳನ್ನು ನಾವು ಅನುಸರಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಭಾರತ ಸರ್ಕಾರದ ಪ್ರತಿನಿಧಿಗಳು ಈ ಹಡಗಿನ ಸಿಬ್ಬಂದಿಯನ್ನು ಭೇಟಿ ಮಾಡಲು ಸಾಧ್ಯವಾಗುತ್ತದೆ ಎಂದು ಡಾ. ಅಮೀರ್ ಅಬ್ದುಲ್ಲಾಹಿಯಾನ್ ಹೇಳಿದರು.
4
+ ಹಡಗನ್ನು ವಶಪಡಿಸಿಕೊಂಡ ಕೂಡಲೇ ಸಿಬ್ಬಂದಿಯನ್ನು ಬಿಡುಗಡೆ ಮಾಡಲು ಭಾರತವು ಇರಾನ್‍ನೊಂದಿಗೆ ಸಂಪರ್ಕದಲ್ಲಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುವುದನ್ನು ತಪ್ಪಿಸಲು ಮತ್ತು ಸಂಯಮವನ್ನು ವ್ಯಾಯಾಮ ಮಾಡಲು ಜೈಶಂಕರ್ ಕರೆ ನೀಡಿದ್ದಾರೆ.
5
+ ಸಿರಿಯಾದಲ್ಲಿನ ತನ್ನ ದೂತಾವಾಸದ ಮೇಲೆ ಇಸ್ರೇಲಿ ದಾಳಿಗಳು ಏಳು ಇರಾನಿನ ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್‍ಗಳನ್ನು ಕೊಂದ ವಾರಗಳ ನಂತರ ನೂರಾರು ಡ್ರೋನ್‍ಗಳು ಮತ್ತು ಕ್ಷಿಪಣಿಗಳನ್ನು ಹಾರಿಸುವ ಮೂಲಕ ಇರಾನ್ ಇಸ್ರೇಲ್ ಮೇಲೆ ತನ್ನ ಮೊದಲ ನೇರ ದಾಳಿಯನ್ನು ಪ್ರಾರಂಭಿಸಿದೆ.
6
+ ಭಾರತವು ತಕ್ಷಣದ ಉಲ್ಬಣವನ್ನು ತಗ್ಗಿಸಲು ಕರೆ ನೀಡಿದೆ ಮತ್ತು ಅಲ್ಲಿನ ಭಾರತೀಯ ಸಮುದಾಯದೊಂದಿಗೆ ನಿಕಟ ಸಂಪರ್ಕದಲ್ಲಿರಲು ಈ ಪ್ರದೇಶದಲ್ಲಿನ ತನ್ನ ರಾಯಭಾರ ಕಚೇರಿಗಳಿಗೆ ಎಚ್ಚರಿಕೆ ನೀಡಿದೆ.
eesanje/url_46_179_5.txt ADDED
@@ -0,0 +1,6 @@
 
 
 
 
 
 
 
1
+ ರಾಜಕೀಯ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರ ಬಳಸಿಕೊಳ್ಳುವವರು ದೇಶದ್ರೋಹಿಗಳು : ಡಿವಿಎಸ್ ವಾಗ್ದಾಳಿ
2
+ ಬೆಂಗಳೂರು,ಏ.14-ತಮ್ಮ ರಾಜಕಾರಣದ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುವವರು ದೇಶದ್ರೋಹಿಗಳು ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಮಠವೇ ಇರಲಿ ಅಥವಾ ಬೇರೆ ಯಾವುದೇ ಧಾರ್ಮಿಕ ಕೇಂದ್ರವಾಗಲೀ ಅವುಗಳ ಸಮಾಜಸೇವೆ ಮಾಡುವ ಕೇಂದ್ರಗಳು. ರಾಜಕಾರಣಕ್ಕಾಗಿ ಮಾತನಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
3
+ ಯಾರೂ ಕೂಡ ಯಾವುದೇ ಮಠದ ಮೇಲೆ ಅನಗತ್ಯವಾಗಿ ಟೀಕೆ ಮಾಡುವುದು, ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ. ಒಕ್ಕಲಿಗರ ಮಠಕ್ಕೆ ತನ್ನದೇ ಆದ ಇತಿಹಾಸ ಮತ್ತು ಪರಂಪರೆ ಇದೆ. ಆ ಮಠವನ್ನು ಯಾರೂ ಕೂಡ ಅನಗತ್ಯವಾಗಿ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು. ಹಿಂದಿನ ಸ್ವಾಮೀಜಿಗಳಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಕೇವಲ ಒಕ್ಕಲಿಗರಿಗೆ ಮಾತ್ರ ಸೀಮಿತವಾಗಿರಲಿಲ್ಲ ಎಲ್ಲಾ ಸಮುದಾಯವನ್ನು ಮುನ್ನಡೆಸಿದ್ದರು. ಈಗಿನ ಶ್ರೀಗಳು ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದು ಹೇಳಿದರು.
4
+ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದಾಗ ನನಗೆ ಕೊನೆ ಕ್ಷಣದಲ್ಲಿ ಬರುವಂತೆ ಸೂಚನೆ ಬಂದಿತ್ತು. ನಾನು ಅನಗತ್ಯವಾಗಿ ಮಾತನಾಡಬಾರದೆಂದು ಸುಮ್ಮನಿದ್ದೇನೆ. ಮಠಗಳು, ಮಠಾೀಶರ ಬಗ್ಗೆ ಸಮಾಜ ತನ್ನದೇ ಆದ ಗೌರವ ಇಟ್ಟುಕೊಂಡಿರುತ್ತದೆ. ಅದನ್ನು ಉಳಿಸುವುದು ಅಗತ್ಯ ಎಂದರು.
5
+ ಕಳೆದ 4 ದಿನಗಳಿಂದ ಬಹಳ ದೊಡ್ಡ ಚರ್ಚೆ ಒಕ್ಕಲಿಗರ ಬಗ್ಗೆ, ಒಕ್ಕಲಿಗರ ಮಠದ ಬಗ್ಗೆ ಚರ್ಚೆ ಆಗುತ್ತಿರುವುದು ಬೇಸರದ ಸಂಗತಿ. ಯಾವುದೇ ರಾಜಕೀಯದಲ್ಲಿ ತೊಡಗಿಸಿಕೊಳ್ಳದ ಅದ್ಬುತ ಮಠದ ಶ್ರೀಗಳು ಚುನಾವಣೆ ಸಂದರ್ಭದಲ್ಲಿ ಚರ್ಚೆಗೆ ಬಂದಿದ್ದು ನೋವಿನ ವಿಷಯ. ಚುನಾವಣೆ ವೇಳೆ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಬರೀ ಆಶೀರ್ವಾದ ಮಾಡಿ ಕಳುಹಿಸಿದ್ದಾರೆ. ಒಕ್ಕಲಿಗರ ಸಮುದಾಯದ ಬಗ್ಗೆ ಯಾರೇ ಮಾತನಾಡಿದ್ದು ತಪ್ಪು. ನಾನು ಇದನ್ನು ಸುತಾರಂ ಒಪ್ಪುವುದಿಲ್ಲ ಎಂದರು.
6
+ ಶ್ರೀಗಳು ಆದಿಚುಂಚನಗಿರಿ ಮಠ ವಿದ್ಯಾಸಂಸ್ಥೆಗಳು, ಆರೋಗ್ಯ ಸೇವೆಯಲ್ಲಿ ತಮ್ಮ ಕಾರ್ಯಗಳನ್ನು ತೊಡಗಿಸಿಕೊಂಡಿದ್ದಾರೆ. ನಾನು ಸಮುದಾಯದ ವ್ಯಕ್ತಿಯಾಗಿ ನಾನು ಒಪ್ಪುವುದಿಲ್ಲ. ದಕ್ಷಿಣ ಕರ್ನಾಟಕದ ಸುಮಾರು 10 ಜಿಲ್ಲೆಯಲ್ಲಿ ತನ್ನದೇ ಆದ ಸ್ವಾಭಿಮಾನದಿಂದ ಬದುಕುತ್ತಿದ್ದಾರೆ. ಈ ಸಮುದಾಯದವರು ಪ್ರಧಾನಮಂತ್ರಿ ಆಗಿದ್ದಾರೆ, ಮಂತ್ರಿಗಳಾಗಿದ್ದಾರೆ. ಅಲ್ಲದೆ ಯಾವುದೇ ರಾಜಕಾರಣಿ ಕೆಂಪೇಗೌಡರ ಹೆಸರು ಹೇಳದೇ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದರು.
eesanje/url_46_179_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಮುಕ್ತ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಸಿದ್ಧತೆ : ಮನೋಜ್ ಕುಮಾರ್ ಮೀನಾ
2
+ ಬೆಂಗಳೂರು, ಏ.14-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಇಂದಿಲ್ಲಿ ತಿಳಿಸಿದರು.
3
+ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಅಂಗವಾಗಿ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೆರೆಯ ತಮಿಳುನಾಡಿನಲ್ಲಿ ಏ.19ರಂದು ಮತದಾನ ನಡೆಯಲಿದೆ. ಈಗಾಗಿ ಏ.17ರಿಂದಲೇ ತಮಿಳುನಾಡು ಗಡಿಯನ್ನು ಸೀಜ್ ಮಾಡಲಾಗುವುದು.
4
+ ಅದೇ ರೀತಿ ಕರ್ನಾಟಕದಲ್ಲಿ ಮತದಾನ ನಡೆಯುವ ಎರಡು ದಿನಗಳ ಮುನ್ನ ತಮಿಳುನಾಡು ಅವರು ಗಡಿಯನ್ನು ಸೀಜ್ ಮಾಡಲಿದ್ದಾರೆ. ತಮಿಳುನಾಡಿನಲ್ಲಿ ನಿಯೋಜಿತರಾಗಿರುವ ಕೇಂದ್ರ ಪಡೆಗಳು ರಾಜ್ಯಕ್ಕೆ ಆಗಮಿಸಲಿವೆ. ಜಿಲ್ಲಾ ಎಸ್ಪಿ ಹಾಗೂ ಪೊಲೀಸ್ ವೀಕ್ಷಕರು ಸಮಾಲೋಚನೆ ನಡೆಸಿ ಅಗತ್ಯ ಪ್ರದೇಶಗಳಿಗೆ ನಿಯೋಜನೆ ಮಾಡುತ್ತಾರೆ. ಆಯಾ ಕ್ಷೇತ್ರಗಳಲ್ಲಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಬಹಿರಂಗ ಪಡಿಸಲಾಗುವುದಿಲ್ಲ. ಚುನಾವಣಾ ಅಕ್ರಮ ತಡೆಯುವುದು ಇದರ ಉದ್ದೇಶವಾಗಿದೆ ಎಂದರು.
5
+ ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ 2.88 ಕೋಟಿ ಮತದಾರರಿದ್ದಾರೆ. 11 ಸಾವಿರ ಸೇವಾ ಮತದಾರರಿದ್ದಾರೆ. 1.44 ಕೋಟಿ ಪುರುಷ, 1.43 ಮಹಿಳಾ ಹಾಗೂ 5.99 ಲಕ್ಷ ಯುವ ಮತದಾರರಿದ್ದಾರೆ, ನಿನ್ನೆಯಿಂದ ನೋಂದಾಯಿತ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರು ಮತದಾನವನ್ನು ಮಾಡುತ್ತಿದ್ದಾರೆ. ಮನೆ ಮನೆಗೆ ತೆರಳಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಏ.18ರ ವರೆಗೂ ಈ ಪ್ರಕ್ರಿಯೆ ನಡೆಯಲಿದೆ ಎಂದರು.
6
+ 30, 602 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಮತದಾನಕ್ಕೆ ಅನುಕೂಲವಾಗುವಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲಾಗಿವುದು. ಶೇ.50ರಷ್ಟು ಮತಗಟ್ಟೆಗಳಲ್ಲಿ ಮತದಾನವನ್ನು ವೆಬ್ ಕಾರ್ಪಿಂಗ್ ಮಾಡಲಾಗುವುದು ಎಂದರು.ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ 24*7 ಮೂರು ಪಾಳಿಯಲ್ಲಿ ವಿವಿಧ ತಂಡಗಳು ಕಾರ್ಯನಿರ್ವಹಿಸುತ್ತಿವೆ.
7
+ ಇದುವರೆಗೂ 345 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ, ಮದ್ಯ ಜಪ್ತಿ ಮಾಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ 88 ಕೋಟಿ ರೂ. ಜಪ್ತಿ ಮಾಡಲಾಗಿದೆ. ಜಪ್ತಿಯಾದ ನಗದಿನಲ್ಲಿ ಸೂಕ್ತ ದಾಖಲೆ ಒದಗಿಸಿದ ಶೇ.49ರಷ್ಟು ಪ್ರಕರಣದಲ್ಲಿ ಹಣ ಹಿಂದಿರುಗಿಸಲಾಗಿದೆ. ಶೆ.51 ರಷ್ಟು ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಶೇ.90 ಪ್ರಕರಣಗಳಲ್ಲಿ ಚಾರ್ಚ್ಶೀಟ್ ಹಾಕಲಾಗಿದೆ. ಶೇ. 40ರಷ್ಟು ಪ್ರಕರಣದಲ್ಲಿ ಶಿಕ್ಷೆಯಾಗಿದೆ ಎಂದರು.
8
+ ಮನೆ ಮನೆಗೆ ತೆರಳಿ ಮತದಾನದ ಜಾಗೃತಿ:ರಾಜ್ಯದ ಸರಾಸರಿ ಮತದಾನಕ್ಕಿಂತ ಕಡಿಮೆ ಮತದಾನವಾಗಿರುವ ಕ್ಷೇತ್ರಗಳಲ್ಲಿ ಮನೆ ಮನೆಗೆ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಲಾಗುತ್ತಿದೆ. ಐಟಿ-ಬಿಟಿ ಪ್ರಮುಖ ಸಂಸ್ಥೆಗಳಿಗೂ ಸಿಬ್ಬಂದಿಗೆ ರಜೆ ನೀಡಿ ಮತದಾನಕ್ಕೆ ಪ್ರೋತ್ಸಾಹ ನೀಡುವಂತೆ ಕೋರಲಾಗಿದೆ. ಅಲ್ಲದೆ ಏ.20ರಿಂದ ಬೆಸ್ಕಾಂ, ಬೆಂಗಳೂರು ಜಲಮಂಡಳಿ ವತಿಯಿಂದ ಮತದಾರಿಗೆ ಸಂದೇಶ ರವಾನಿಸಲಾಗುವುದು. ಹಾಲಿನ ಪಾಕೆಟ್ ಮೇಲೆಯೂ ಮತದಾನದ ಜಾಗೃತಿ ಸಂದೇಶ ಮುದ್ರಿಸಲಾಗುತ್ತದೆ.
9
+ 2019ರಲ್ಲಿ 43 ವಿಧಾನ ಸಭಾ ಕ್ಷೇತ್ರಗಳ 5 ಸಾವಿರ ಮತಗಟ್ಟೆಗಳಲ್ಲಿ ಕಡಿಮೆ ಮತದಾನವಾಗಿತ್ತು ಎಂದರು. ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ತೆರಳುವವರು ಜೊತೆಯಲ್ಲಿ ಹಣ ಕೊಂಡೊಯ್ಯುವುದು ಸಾಮಾನ್ಯವಾಗಿದ್ದು, ಅವರಿಗೆ ವಿನಾಕಾರಣ ತೊಂದರೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.
10
+ ಸಂವಾದದಲ್ಲಿ ರಾಜ್ಯ ಹೆಚ್ಚುವರಿ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ಕೂರ್ಮಾರಾವ್, ಮಾಧ್ಯಮ ವಿಶೇಷಾಧಿಕಾರಿ ಎ.ವಿ. ಸೂರ್ಯಸೇನ್, ಪ್ರೆಸ್ ಕ್ಷಬ್ ಅಧ್ಯಕ್ಷ ಆರ್. ಶ್ರೀಧರ, ಪ್ರಧಾನ ಕಾರ್ಯದರ್ಶಿ ಬಿ.ಪಿ. ಮಲ್ಲಪ್ಪ ಮತ್ತಿತರರು ಇದ್ದರು.
eesanje/url_46_179_7.txt ADDED
@@ -0,0 +1,6 @@
 
 
 
 
 
 
 
1
+ ಮೈಸೂರಲ್ಲಿಂದು ಮೋದಿ ಮತಬೇಟೆ, ಬಿಗಿ ಪೊಲೀಸ್ ಬಂದೋಬಸ್ತ್
2
+ ಮೈಸೂರು, ಏ.14-ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಂಜೆ 5 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೋದಿಯವರು ಭಾಷಣ ಮಾಡಲಿದ್ದಾರೆ.
3
+ ಮೋದಿ ಆಗಮಿಸುವ ರಸ್ತೆಗಳು ಹಾಗೂ ಮಹಾರಾಜ ಕಾಲೇಜು ಸುತ್ತಮುತ್ತ ಭಾರೀ ಬಂದೋಬಸ್ತ್ ಮಾಡಲಾಗಿದೆ, ಇಂದು ಬೆಳಗಿನಿಂದಲೇ ಹಿರಿಯ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗಿ ಭದ್ರತೆಯನ್ನು ಪರಿಶೀಲಿಸಿದರು. ಮಧ್ಯಪ್ರದೇಶದಿಂದ ನೇರ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ, ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವರು.
4
+ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪರ ಮತಯಾಚಿಸಲಿರುವರು. ವೇದಿಕೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹಾಗೂ ಅಭ್ಯರ್ಥಿಗಳಾದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್, ಎಚ್.ಡಿ ಕುಮಾರಸ್ವಾಮಿ, ಎಸ್.ಬಾಲರಾಜ್, ಪ್ರಜ್ವಲ್ ರೇವಣ್ಣ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳುವರು.
5
+ ಮಹಾರಾಜ ಕಾಲೇಜು ಮೈದಾನದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಬಿಜೆಪಿ ಜೆಡಿಎಸ್ ಸಮಾವೇಶ ನಡೆಯುತ್ತಿರುವುದರಿಂದ ಮೈತ್ರಿ ಪಕ್ಷಗಳ ಕಾರ್ಯಕರ್ತರು ಮುಖಂಡರ ಉತ್ಸಾಹ ಮೇರೆ ಮೀರಿದೆ.
6
+ ಸುಮಾರು ಒಂದು ಗಂಟೆ ಕಾಲ ಮೋದಿ ಪ್ರಚಾರ ಭಾಷಣ ಮಾಡಲಿದ್ದು ನಂತರ ಮಂಗಳೂರಿಗೆ ತೆರಳಿ ಅಲ್ಲಿ ರೋಡ್ ಷೋನಲ್ಲಿ ಪಾಲ್ಗೊಳ್ಳುವರು.
eesanje/url_46_179_8.txt ADDED
@@ -0,0 +1,8 @@
 
 
 
 
 
 
 
 
 
1
+ ಮೊಬೈಲ್ ರಿಪೇರಿ ಮಾಡಿಸಲು ಹೋಗಿ ಸಿಕ್ಕಿಬಿದ್ದ ರಾಮೇಶ್ವರಂ ಕೆಫೆ ಸ್ಫೋಟದ ಉಗ್ರರು
2
+ ಬೆಂಗಳೂರು,ಏ.14-ತನ್ನ ಬಳಿ ಇದ್ದ ಮೊಬೈಲ್ ಫೋನ್ ರಿಪೇರಿ ಮಾಡಿಸಲು ಹೋಗಿ ರಾಮೇಶ್ವರಂ ಕೆಫೆ ಸ್ಫೋಟದ ರೂವಾರಿಗಳಾದ ಮುಸ್ಸಾವಿರ್ ಹುಸೇನ್ ಶಾಜೆಬ್ ಹಾಗೂ ಅಬ್ದುಲ್ ಮಥೀನ್ ತಾಹಾ ದೂರದ ಪಶ್ಚಿಮ ಬಂಗಾಳದಲ್ಲಿ ಎನ್‍ಐಎ ಖೆಡ್ಡಾಕ್ಕೆ ಸಿಕ್ಕಿಬಿದ್ದಿದ್ದಾರೆ.ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ನಂತರ ಯಾರಿಗೂ ಸಣ್ಣ ಸುಳಿವು ಬಿಟ್ಟುಕೊಡದೆ ಕೋಲ್ಕತ್ತಾಗೆ ತೆರಳಿ ಖಾಸಗೀ ಹೋಟೆಲ್ ಒಂದರಲ್ಲಿ ಪ್ರವಾಸಿಗರಂತೆ ತಂಗಿದ್ದ ಉಗ್ರರು ಅಲ್ಲೇ ಮೊಬೈಲ್ ಫೋನ್ ರಿಪೇರಿ ಮಾಡಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ಈಸಂಜೆಗೆ ಖಚಿತಪಡಿಸಿವೆ.
3
+ ಕೋಲ್ಕತ್ತಾದ ಹೋಟೆಲ್‍ನಲ್ಲಿ ತಲೆಮರೆಸಿಕೊಂಡಿದ್ದ ಉಗ್ರರ ಬಳಿ ಇದ್ದ ಒಬ್ಬನ ಮೊಬೈಲ್ ಕೆಟ್ಟು ಹೋಗಿತ್ತು. ಹೀಗಾಗಿ ಆತ ಸಿಮ್ ತೆಗೆದುಕೊಂಡು ಖಾಲಿ ಮೊಬೈಲ್ ಅನ್ನು ರಿಪೇರಿ ಮಾಡಿಸಲು ಸಮೀಪದ ಮೊಬೈಲ್ ರಿಪೇರಿ ಅಂಗಡಿ ತೆರಳಿ ಮೊಬೈಲ್ ನೀಡಿದ್ದ.
4
+ ಮೊಬೈಲ್ ರಿಪೇರಿ ಆದ ನಂತರ ಅಂಗಡಿಯಾತನ ಬಳಿ ಇದ್ದ ಬೇರೆ ಸಿಮ್ ಹಾಕಿ ಪರೀಕ್ಷಿಸಿದ್ದ ಮಾತ್ರವಲ್ಲ ಅದೇ ನಂಬರ್‍ನಿಂದ ಯಾರಿಗೋ ಫೋನ್ ಮಾಡಿದ್ದ ಆ ಸಂದರ್ಭದಲ್ಲಿ ಮೊಬೈಲ್ ಲೊಕೇಷನ್ ಮಾಹಿತಿ ಎನ್‍ಐಎ ಪೊಲೀಸರಿಗೆ ಲಭಿಸಿತ್ತು. ನಂತರ ಎನ್‍ಐಎ ಅಧಿಕಾರಿಗಳು ಅಂಗಡಿ ಬಳಿ ಹೋಗಿ ಮೊಬೈಲ್ ರಿಪೇರಿಗೆ ಬಂದಿದ್ದವರ ಮಾಹಿತಿಯನ್ನು ಪಡೆದುಕೊಂಡರು. ಖಚಿತ ಸುಳಿವಿನ ಆಧಾರದ ಮೇಲೆ ಹೋಟೆಲ್ ಮೇಲೆ ದಾಳಿ ಮಾಡಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
5
+ ಬೆಂಗಳೂರಿನಿಂದ ಪರಾರಿಯಾಗಿದ್ದ ಇಬ್ಬರು ಉಗ್ರರು ಮೊದಲು ಕೋಲ್ಕತ್ತಾದ ಹೋಟೆಲ್ ಒಂದರಲ್ಲಿ ರೂಮ್ ಪಡೆಯುವಾಗ ರಿಜಿಸ್ಟರ್‍ನಲ್ಲಿ ತಮ್ಮ ಹೆಸರು ಬರೆದಿದ್ದರು ಆಗ ಎರಡನೆ ಆರೋಪಿ ಮೊದಲು ತನ್ನ ವಿಶೇಷ ಹೆಸರು ಬರೆದು ನಂತರ ಅದನ್ನು ಹೊಡೆದುಹಾಕಿ ತನ್ನ ನಿಜ ನಾಮಧೇಯ ಬರೆದಿರುವುದು ಪೊಲೀಸರ ತನಿಖೆ ವೇಳೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
6
+ ನಾವು ಪ್ರವಾಸಿಗರು ಡಾರ್ಜಿಲಿಂಗ್‍ನಿಂದ ಬರುತ್ತಿರುವುದಾಗಿ ಹೋಟೆಲ್ ನವರಿಗೆ ತಿಳಿಸಿ, ಇಲ್ಲಿಂದ ಚೆನ್ನೈಗೆ ಹೋಗುತ್ತಿರುವುದಾಗಿ ಹೇಳಿದ್ದರು. ಆದರೆ, ನಂತರ ಇಬ್ಬರು ಯಾವ ಸುಳಿವು ನೀಡದೆ ಆ ಹೋಟೆಲ್‍ನಿಂದ ಹೊರಟು ಹೋಗಿದ್ದರು. ಜೊತೆಗೆ ನಕಲಿ ಆಧಾರ್‍ಕಾರ್ಡ್ ಬಳಸಿ ರೂಮ್ ಪಡೆದಿದ್ದರು ಎಂದು ಗೊತ್ತಾಗಿದೆ.
7
+ ಎನ್‍ಐಎ ಬಲೆಗೆ ಬಿದ್ದಿರುವ ಉಗ್ರರಾದ ಮುಸ್ಸಾವಿರ್ ಹುಸೇನ್ ಶಾಜೆಬ್ ಹಾಗೂ ಅಬ್ದುಲ್ ಮಥೀನ್ ತಾಹಾ ಅವರು ಕಳೆದ 28 ದಿನಗಳಿಂದ ಪಶ್ಚಿಮ ಬಂಗಾಳದಲ್ಲಿ ಪ್ರವಾಸಿಗರಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದರು ಎಂದು ಪೊಲೀಸ್ ಮೂಲಗಳು ಉಲ್ಲೇಖಿಸಿವೆ.
8
+ ಈ ವೇಳೆ ಇಬ್ಬರು ಉಗ್ರರು ಕೋಲ್ಕತ್ತಾದ ನಗರ ವ್ಯಾಪ್ತಿಯಲ್ಲಿರುವ ಮೂರು ಹೋಟೆಲïಗಳಲ್ಲಿ ತಂಗಿದ್ದ ಬಗ್ಗೆ ಹಾಗೂ ಹೋಟೆ���್ ವೊಂದರಲ್ಲಿ ಉಗ್ರರು ರಿಜಿಸ್ಟರ್‍ನಲ್ಲಿ ತಮ್ಮ ಹೆಸರು ಬರೆಯುತ್ತಿರುವ ಸಿಸಿಟಿವಿ ದೃಶ್ಯಾವಳಿ ಕೂಡ ಪೊಲೀಸರಿಗೆ ಲಭ್ಯವಾಗಿದೆ.
eesanje/url_46_179_9.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದ ಹಲವೆಡೆ ಇನ್ನೂ ಮೂರ್ನಾಲ್ಕು ದಿನ ಮಳೆ
2
+ ಬೆಂಗಳೂರು,ಏ.14-ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳು ಮುಂದುವರೆಯುವ ಮುನ್ಸೂಚನೆಗಳಿವೆ.
3
+ ಕಲ್ಯಾಣ ಕರ್ನಾಟಕ, ಮಲೆನಾಡು, ಕೊಡಗು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಮಿಂಚು, ಬಿರುಗಾಳಿ, ಆಲಿಕಲ್ಲು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದರೂ ಮಳೆಯಾಗುತ್ತಿಲ್ಲ.
4
+ ಪೂರ್ವ ಮುಂಗಾರು ಕೂಡ ರಾಜ್ಯದಲ್ಲಿ ಕೈಕೊಟ್ಟಿದೆ. ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟು ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಆವರಿಸಿದೆ. ಇದರ ಬೆನ್ನಲ್ಲೇ ಕುಡಿಯುವ ನೀರಿನ ತೀವ್ರ ಸಂಕಷ್ಟ ಎದುರಾಗಿದೆ. ಬೇಸಿಗೆಯಲ್ಲಿ ಬರುತ್ತಿದ್ದ ಮುಂಗಾರು ಪೂರ್ವ ಮಳೆಯೂ ಕೂಡ ವಾಡಿಕೆ ಪ್ರಮಾಣದಲ್ಲಿ ಆಗುತ್ತಿಲ್ಲ.
5
+ ಜನವರಿಯಿಂದ ಇಲ್ಲಿಯವರೆಗೆ ಶೇ.44 ರಷ್ಟು ಮಳೆ ಕೊರತೆ ಕಂಡುಬಂದಿದೆ. ಈ ಅವಧಿಯಲ್ಲಿ 24 ಮಿಲಿ ಮೀಟರ್‍ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದರೆ, ಕೇವಲ 14 ಮಿಲಿ ಮೀಟರ್‍ನಷ್ಟು ಮಾತ್ರ ಮಳೆಯಾಗಿದೆ.
6
+ ರಾಜ್ಯದ ಬಹುತೇಕ ಕಡೆ ಒಣಹವೆ ಮುಂದುವರೆದಿದ್ದು, ಮಳೆಯ ಅಭಾವ ಎಲ್ಲೆಡೆ ಕಂಡುಬರುತ್ತಿದೆ. ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಬೀದರ್, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವೆಡೆ ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳು ಮಳೆಗೆ ಹಾನಿಗೀಡಾಗಿವೆ.
7
+ ಬಿರುಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿವೆ. ಹವಾಮಾನ ಮುನ್ಸೂಚನೆ ಪ್ರಕಾರ ಮೂರ್ನಾಲ್ಕು ದಿನಗಳು ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ.
8
+ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ. ಕೆಲವೆಡೆ ಹಗುರವಾದ ಸಾಧಾರಣ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಮೂರ್ನಾಲ್ಕು ದಿನದಿಂದಲೂ ಕಂಡುಬರುತ್ತಿದ್ದರೂ ಮಳೆ ಮಾತ್ರ ಬೀಳುತ್ತಿಲ್ಲ.
9
+ ತಾಪಮಾನ ಗರಿಷ್ಠ ಮಟ್ಟ ತಲುಪಿದೆ. ಬಿಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ. ಮಳೆಯ ನಿರೀಕ್ಷೆಯಲ್ಲೇ ಜನರು ಕಾಲ ದೂಡುತ್ತಿದ್ದಾರೆ. ಆದರೆ ಮಳೆಯಾಗುವ ನಿಖರವಾದ ಮುನ್ಸೂಚನೆಗಳು ಇಲ್ಲಿಯವರೆಗೂ ದೊರೆತಿಲ್ಲ.
eesanje/url_46_17_1.txt ADDED
@@ -0,0 +1,6 @@
 
 
 
 
 
 
 
1
+ 5 ವರ್ಷದಲ್ಲಿ ಕಲ್ಯಾಣ ಕರ್ನಾಟಕ ಭಾಗದ 50 ಸಾವಿರ ಹುದ್ದೆಗಳ ನೇಮಕಾತಿ : ಸಚಿವ ಶರಣಪ್ರಕಾಶ್‌ ಪಾಟೀಲ್‌
2
+ 50
3
+ ಕಲಬುರಗಿ,ಸೆ.16-ಇಲ್ಲಿ ನಾಳೆ ನಡೆಯುತ್ತಿರುವ ಸಚಿವ ಸಂಪುಟ ಸಭೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ರಾಜ್ಯದ ವ್ಯಾಪ್ತಿಯನ್ನು ಒಳಗೊಂಡಿರುತ್ತದೆ. ಆದರೆ ನಮ ಭಾಗದ ದೀರ್ಘಕಾಲಿಕ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.
4
+ ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013-18 ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹ್ದುೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹ್ದುೆ ತುಂಬಲಾಗುವುದು. ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹ್ದುೆ ತುಂಬಲಾಗುವುದು ಎಂದು ಹೇಳಿದರು.
5
+ ನಮ ಸರ್ಕಾರದ ಅವಧಿ ಮುಗಿಯುವದರೊಳಗೆ 50,000 ಖಾಲಿಹ್ದುೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ದು, ಅದಕ್ಕೆ ಬದ್ಧವಾಗಿದ್ದೇವೆ ಎಂದರು.
6
+ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಮೆಡಿಕಲ್‌ ಕಾಲೇಜುಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕರಾತಕ ರಾಜಕೀಯ ಮಾಡದೆ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದು ಇತ್ತೀಚೆಗೆ ನಡೆಯುತ್ತಿರುವ ಕೆಲವು ಕೋಮು ಸೂಕ್ಷ್ಮ ಘಟನೆಗಳಿಗೆ ಪ್ರತಿಕ್ರಿಯಿಸಿದರು.
eesanje/url_46_17_10.txt ADDED
@@ -0,0 +1,5 @@
 
 
 
 
 
 
1
+ ಸುರತ್ಕಲ್‌ : ಮಸೀದಿ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ
2
+ -------
3
+ ಮಂಗಳೂರು:ಸುರತ್ಕಲ್‌ ಬಳಿಯ ಕಾಟಿಪಳ್ಳದಲ್ಲಿ ಕಳೆದ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್‌ ನ ಬದ್ರಿಯಾ ಬಳಿ ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್‌ ಮಿಲಾದ್‌ ಮುನ್ನಾ ದಿನವೇ ಘಟನೆ ನಡೆದಿದ್ದು, ಪರಿಸ್ಥಿತಿ ಸ್ಥಳದಲ್ಲಿ ಉದ್ವಿಗ್ನವಾಗಿದೆ.
4
+ ರಾತ್ರಿ 10.30ರ ಸುಮಾರಿಗೆ 2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಗೆ ಸದ್ಯ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕಲ್ಪಿಸಲಾಗಿದೆ.
5
+ ಉದೇಶಪೂರ್ವಕವಾಗಿ ಈ ಕೃತ್ಯ ಎಸಗಲಾಗಿದೆ ಎಂಬ ಮಾತು ಕೇಳಿಬರುತ್ತಿದೆ .ಪೊಲೀಸರು ಸ್ಥಳೀಯ ಸಿಸಿಟಿವಿ ಪರಿಶೀಲಿಸುತ್ತಿದ್ದು ,ತನಿಖೆ ಮುಂದುವರೆದಿದೆ.ಪಕ್ಕದ ಮನೆ ಮೇಲೆ ಕಲ್ಲು ಎಸೆಯಲು ಹೋಗಿ ಅದು ಪ್ರಾರ್ಥನಾ ಮಂದಿರದ ಕಿಟಕಿಗೆ ಬಿದ್ದಿದೆ.
eesanje/url_46_17_11.txt ADDED
@@ -0,0 +1,5 @@
 
 
 
 
 
 
1
+ ವೈಯಾಲಿಕಾವಲ್ ಪೊಲೀಸರಿಂದ ಶಾಸಕ ಮುನಿರತ್ನ ತೀವ್ರ ವಿಚಾರಣೆ
2
+ ಬೆಂಗಳೂರು,ಸೆ.15– ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಕೋಲಾರ ಜಿಲ್ಲೆಯ ನಂಗಲಿ ಗ್ರಾಮದ ಬಳಿಯಿಂದ ಮುನಿರತ್ನ ಅವರನ್ನು ಕರೆತಂದು ಬಂಧನದ ಪ್ರಕ್ರಿಯೆ ಮುಗಿದ ನಂತರ ವೈದ್ಯಕೀಯ ತಪಾಸಣೆಗೊಳಪಡಿಸಿ ಬಳಿಕ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದ್ದಾರೆ.
3
+ ನೀವು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರಿಗೆ ನಿಂದಿಸಿ ಲಂಚ ಕೇಳಿದ್ದೀರಾ? ಬಿಬಿಎಂಪಿಯ ಮಾಜಿ ಸದಸ್ಯ ವೇಲು ನಾಯ್ಕರ್ ಅವರಿಗೆ ಏಕೆ ಜಾತಿನಿಂದನೆ ಮಾಡಿದ್ದೀರಿ? ಅವರಿಗೂ, ನಿಮಗೂ ಏನು ಸಂಬಂಧ? ಗುತ್ತಿಗೆಯಲ್ಲಿ ಅವರ ಪಾತ್ರವೇನು? ನೀವು ಈ ರೀತಿ ಪದಗಳನ್ನು ಬಳಸಿ ನಿಂದನೆ ಮಾಡಬಹುದೇ? ನೀವು ಜನಪ್ರತಿನಿಧಿಗಳು ಈ ರೀತಿ ಮಾತನಾಡುವುದು ಸರಿಯೇ? ಎಂಬಿತ್ಯಾದಿ ಪ್ರಶ್ನೆಗಳನ್ನು ಎಸಿಪಿಯವರು ಕೇಳಿ ಮಾಹಿತಿಯನ್ನು ಪಡೆದುಕೊಂಡಿ ದ್ದಾರೆ ಎಂದು ತಿಳಿದುಬಂದಿದೆ.
4
+ ಮಧ್ಯರಾತ್ರಿ 12ರಿಂದ 1.30ರವರೆಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಎಸಿಪಿಯವರು ಮುನಿರತ್ನ ಅವರನ್ನು ವಿಚಾರಣೆಗೊಳಪಡಿಸಿದ್ದರೆಂದು ಗೊತ್ತಾಗಿದೆ.ಆ ಆಡಿಯೋದಲ್ಲಿ ಇರುವುದು ನನ್ನ ಧ್ವನಿಯಲ್ಲ. ನಾನು ಜನಪ್ರತಿನಿಧಿ. ಆ ರೀತಿ ಮಾತನಾಡಲಿಲ್ಲ. ನನ್ನ ವಿರುದ್ಧ ಪಿತೂರಿ ಹಾಗೂ ಷಡ್ಯಂತ್ರ ಮಾಡಿದ್ದಾರೆ ಎಂದು ಮುನಿರತ್ನ ತನಿಖಾಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ ಎಂದು ತಿಳಿದುಬಂದಿದೆ.
5
+ ಇಂದು ಸಹ ಮುನಿರತ್ನ ಅವರನ್ನು ತನಿಖಾಧಿಕಾರಿಗಳು ವಿಚಾರಣೆಗೊಳಪಡಿಸಿ ಕೆಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ. ಮುನಿರತ್ನ ಅವರ ಬಂಧನದ ಹಿನ್ನಲೆಯಲ್ಲಿ ವೈಯಾಲಿಕಾವಲ್ ಪೊಲೀಸ್ ಠಾಣೆಯ ಸುತ್ತಮುತ್ತ ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
eesanje/url_46_17_12.txt ADDED
@@ -0,0 +1,8 @@
 
 
 
 
 
 
 
 
 
1
+ ಪರಪ್ಪನ ಅಗ್ರಹಾರ ಜೈಲಲ್ಲಿ ಏನೇನೂ ಬದಲಾಗಿಲ್ಲ, ರೌಡಿಗಳ ಬಳಿ ಮೊಬೈಲ್
2
+
3
+ ಬೆಂಗಳೂರು,ಸೆ.15-ಯಾರ್ ಏನೇ ಮಾಡಿದರೂ ಪರಪ್ಪನ ಅಗ್ರಹಾರ ಜೈಲಿನ ಸ್ಥಿತಿ ಸರಿ ಹೋಗಲ್ಲ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ.ನಿನ್ನೆ ಸಂಜೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮತ್ತವರ ತಂಡ ಪರಪ್ಪನ ಅಗ್ರಹಾರದ ಜೈಲಿನ ಮೇಲೆ ನಡೆಸಿದ ದಿಢೀರ್ ದಾಳಿ ವೇಳೆ ರೌಡಿ ವಿಲ್ಸನ್ ಗಾರ್ಡನ್ ನಾಗ ಮತ್ತಿತರರ ಬ್ಯಾರಕ್ಗಳಲ್ಲಿ 15 ಮೊಬೈಲ್ ಫೋನ್ಗಳು, ಚಾರ್ಜರ್ಗಳು, ಪೆನ್ ಡ್ರೈವ್ಗಳು, ಇಯರ್ಫೋನ್ಗಳು, ಎಲೆಕ್ಟ್ರಾನಿಕ್ ಸ್ಟೌವ್ ಮತ್ತಿತರ ವಸ್ತುಗಳು ಪತ್ತೆಯಾಗಿವೆ.
4
+ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರನಟ ದರ್ಶನ್, ರೌಡಿ ವಿಲ್ಸನ್ ಗಾರ್ಡನ್ ನಾಗ ಮತ್ತಿತರ ಜೊತೆಗೆ ಜೈಲಿನಲ್ಲಿ ಕುರ್ಚಿ ಮೇಲೆ ಕುಳಿತು ಸಿಗರೇಟ್ ಸೇದುತ್ತಿದ್ದ ಪೋಟೋಗಳು ವೈರಲ್ ಆಗುತ್ತಿದ್ದಂತೆ ಪರಪ್ಪನ ಅಗ್ರಹಾರ ಜೈಲಿನ ಸ್ಥಿತಿಗತಿ ಬಗ್ಗೆ ಕಳವಳ ಹುಟ್ಟಿಕೊಂಡಿತ್ತು.
5
+ ತಕ್ಷಣ ಎಚ್ಚೆತ್ತುಕೊಂಡ ಸರ್ಕಾರ ಪರಪ್ಪನ ಅಗ್ರಹಾರ ಬಂಧಿಖಾನೆಯ 9 ಅಧಿಕಾರಿಗಳನ್ನು ಅಮಾನತು ಮಾಡಿ 30ಕ್ಕೂ ಹೆಚ್ಚು ಸಿಬ್ಬಂದಿ ಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿತ್ತು. ನಂತರ ಜೈಲಿನ ಪರಿಸ್ಥಿತಿ ಸರಿ ಹೋಗಬಹುದು ಎಂಬ ಸರ್ಕಾರದ ನಿರೀಕ್ಷೆ ಇದೀಗ ಮತ್ತೆ ಹುಸಿಯಾಗಿದೆ.
6
+ ಜೈಲಿನಲ್ಲಿ ರಾಜಾತಿಥ್ಯ, ಮೊಬೈಲ್ ಬಳಕೆ ಕುರಿತಂತೆ ಈಗಾಗಲೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.ಜೈಲಿನ ಪರಿಸ್ಥಿತಿ ಕುರಿತಂತೆ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತರು ತನಿಖೆ ನಡೆಸುತ್ತಿದ್ದಾರೆ ಆದರೂ ಜೈಲಿನ ಸ್ಥಿತಿ ಸುಧಾರಿಸದಿರುವುದು ಸರ್ಕಾರಕ್ಕೆ ತಲೆನೋವು ತರಿಸಿದೆ.
7
+ ಡಿಸಿಪಿ ಸಾರಾ ಫಾತಿಮಾ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ, ಪರಪ್ಪನ ಅಗ್ರಹಾರ ಠಾಣೆಯ ಇನ್‌್ಸಪೆಕ್ಟರ್, ಇತರ ಮೂವರು ಇನ್‌್ಸಪೆಕ್ಟರ್ಗಳು ಸೇರಿದಂತೆ 30 ಪೊಲೀಸರಿದ್ದ ತಂಡ ನಿನ್ನೆ ಸಂಜೆ 6 ರಿಂದ 830ರವರೆಗೆ ನಡೆಸಿದ ದಿಢೀರ್ ದಾಳಿ ವೇಳೆ ಪರಪ್ಪನ ಅಗ್ರಹಾರ ಜೈಲಿನ ಸ್ಥಿತಿ ಇನ್ನು ಸುಧಾರಿಸಿಲ್ಲ ಎನ್ನುವುದಕ್ಕೆ ಅಲ್ಲಿ ಸಿಕ್ಕಿರುವ ವಸ್ತುಗಳೇ ಸಾಕ್ಷಿಯಾಗಿವೆ.
8
+ ಚಿತ್ರನಟ ದರ್ಶನ್ ಜೊತೆಗೆ ಕಾಣಿಸಿಕೊಂಡಿದ್ದ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಇನ್ನಿತರ ರೌಡಿಗಳಿರುವ ಬ್ಯಾರಕ್ಗಳ ಮೇಲೆ ದಾಳಿ ನಡೆಸಿದಾಗ ಕೆಲವರ ಬಳಿ ಇದ್ದ 15 ಮೊಬೈಲ್ ಫೋನ್ಗಳು ಮತ್ತಿತರ ಬಹುಪಯೋಗಿ ವಸ್ತುಗಳನ್ನು ವಶಪಡಿಸಿಕೊಂಡು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಲಾಗಿದೆ.
eesanje/url_46_17_2.txt ADDED
@@ -0,0 +1,9 @@
 
 
 
 
 
 
 
 
 
 
1
+ ಜೈಲಿನ ಅಧಿಕಾರಿ, ಸಿಬ್ಬಂದಿಗಳಿಂದಲೇ ‘ದಾಸ’ನಿಗೆ ರಾಜಾತಿಥ್ಯ
2
+
3
+ ಬೆಂಗಳೂರು, ಸೆ.16-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ನಟ ದರ್ಶನ್‌, ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇತರರಿಗೆ ಆತಿಥ್ಯ ನೀಡಿದ್ದಾರೆಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.
4
+ ಕಾರಾಗೃಹದೊಳಗೆ ರಾಜಾತಿಥ್ಯದ ಬಗ್ಗೆ ತನಿಖೆ ನಡೆಸುತ್ತಿರುವ ಮೂರು ತಂಡಗಳು ತಮ ತನಿಖೆಗಳನ್ನು ತೀವ್ರಗೊಳಿಸಿದ್ದು, ತನಿಖೆ ಅಂತಿಮ ಹಂತಕ್ಕೆ ಬಂದಿದೆ.ನಟ ದರ್ಶನ್‌, ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇತರರು ಕಾರಾಗೃಹದ ಆವರಣದಲ್ಲಿ ಚೇರ್‌ನಲ್ಲಿ ಕುಳಿತು ಟೀಪಾಯಿ ಇಟ್ಟುಕೊಂಡು, ಕೈಯಲ್ಲಿ ಕಾಫಿ ಹಾಗೂ ಸಿಗರೇಟ್‌ ಹಿಡಿದಿರುವಂತಹ ಫೋಟೋ ಗಳು ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
5
+ ಹಾಗಾಗಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಈ ಬಗ್ಗೆ ಮೂರು ಪ್ರಕರಣಗಳು ದಾಖಲಾದವು. ಆ ಪೈಕಿ 2 ಪ್ರಕರಣಗಳಲ್ಲಿ ದರ್ಶನ್‌ ಹೆಸರನ್ನು ಉಲ್ಲೇಖಿಸಲಾಗಿದೆ.ದರ್ಶನ್‌ ಹಾಗೂ ರೌಡಿ ನಾಗನಿಗೆ ಟೀ, ಸಿಗರೇಟ್‌, ಚೇರ್‌ ಕೊಟ್ಟವರ್ಯಾರು ಎಂಬುವುದರ ಬಗ್ಗೆ ಹುಳಿಮಾವು ಠಾಣೆ ಇನ್‌್ಸಪೆಕ್ಟರ್‌ ತನಿಖೆ ನಡೆಸುತ್ತಿದ್ದಾರೆ.
6
+ ಜೈಲಿನ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ರೌಡಿ ವಿಲ್ಸನ್‌ಗಾರ್ಡನ್‌ ನಾಗನ ಮೂಲಕ ಇವೆಲ್ಲವನ್ನು ಸರಬರಾಜು ಮಾಡಲಾಗಿದೆ ಎಂಬುದು ಗೊತ್ತಾಗಿದೆ.ಅಲ್ಲದೆ ಕಾರಾಗೃಹದೊಳಗೆ ರೌಡಿ ಶೀಟರ್‌ ಮಗ ಸತ್ಯನೊಂದಿಗೆ ನಟ ದರ್ಶನ್‌ ವಿಡಿಯೋಕಾಲ್‌ನಲ್ಲಿ ಮಾತನಾಡಿರುವ ಬಗ್ಗೆ ಬೇಗೂರು ಠಾಣೆ ಇನ್‌್ಸಪೆಕ್ಟರ್‌ ತನಿಖೆ ನಡೆಸುತ್ತಿದ್ದಾರೆ.
7
+ ರೌಡಿಶೀಟರ್‌ ಮಗ ಸತ್ಯನಿಗೆ ವಿಡಿಯೋಕಾಲ್‌ ಮಾಡಲು ಬಳಸಿರುವ ಮೊಬೈಲ್‌ನ್ನು ಸಹ ಜೈಲು ಅಧಿಕಾರಿಗಳ ಮೂಲಕ ಅಕ್ರಮವಾಗಿ ಪಡೆದಿರುವುದು ತನಿಖೆಯಿಂದ ತಿಳಿದು ಬಂದಿದೆ.ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಎಸಿಪಿ ಅವರು ತನಿಖೆ ಮಾಡುತ್ತಿರುವ ಮತ್ತೊಂದು ಪ್ರಕರಣದಲ್ಲಿ, ಜೈಲು ಅಧಿಕಾರಿಗಳು ತಮ ಕಾರ್ಯವ್ಯಾಪ್ತಿ ಮೀರಿ ಖೈದಿಗಳನ್ನು ಬಳಸಿಕೊಂಡು ಕೆಲಸ ಮಾಡಿರುವುದು ಕಂಡುಬಂದಿದೆ.
8
+ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಮಾನತುಗೊಂಡಿರುವ ಜೈಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್‌‍ ನೀಡಲಾಗಿದ್ದು, ಕೆಲವರು ಇನ್ನು ವಿಚಾರಣೆಗೆ ಹಾಜರಾಗಿಲ್ಲ.
9
+ ರೌಡಿ ಶೀಟರ್‌ ತನ್ನ ಮಗನಿಗೆ ವಿಡಿಯೋಕಾಲ್‌ ಮಾಡಲು ಬಳಿಸಿರುವ ಮೊಬೈಲ್‌ನ್ನು ಎಫ್‌ಎಸ್‌‍ಎಲ್‌ಗೆ ಹೆಚ್ಚಿನ ತನಿಖೆಗಾಗಿ ಕಳುಹಿಸಲಾಗಿದ್ದು, ಸಂಬಂಧಪಟ್ಟ ಟೆಲಿಕಾಂ ಸಂಸ್ಥೆಗಳಿಗೂ ವರದಿ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ.ಒಟ್ಟಾರೆ ಈ ಮೂರು ಪ್ರಕರಣಗಳ ತನಿಖೆ ಬಹುತೇಕ ಮುಕ್ತಾಯ ಹಂತದಲ್ಲಿವೆ.
eesanje/url_46_17_3.txt ADDED
@@ -0,0 +1,6 @@
 
 
 
 
 
 
 
1
+ ಮಾನವ ಸರಪಳಿ ನೆಪದಲ್ಲಿ ಬಿಟ್ಟಿ ಪ್ರಚಾರ ಗಿಟ್ಟಿಸಿದ ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಡಿಕೆ ತರಾಟೆ
2
+
3
+ ಬೆಂಗಳೂರು,ಸೆ.16– ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್‌‍ ಸರ್ಕಾರವನ್ನು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
4
+ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಜಾಪ್ರಭುತ್ವದ ಸರಪಳಿಯ ತಳ ಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ, ತಾಲೂಕು ಪಂಚಾಯತಿ ಮತ್ತು ಬಿಬಿ ಎಂಪಿ ಚುನಾವಣೆ ನಡೆಸಿಲ್ಲ, ಏಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಪ್ರಶ್ನಿಸಿದ್ದಾರೆ.
5
+ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. ನಿಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಅವರು ಕಿಡಿಕಾರಿದ್ದಾರೆ.
6
+ ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಅವರು ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.
eesanje/url_46_17_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸ್ಲೀಪರ್​​ ಸೆಲ್​​ಗಳ ತಾಣವಾಗುತ್ತಿವೆ ಮೈಸೂರು-ಮಲೆನಾಡು : ಸಿ.ಟಿ.ರವಿ ಹೊಸ ಬಾಂಬ್
2
+ :
3
+ ಮೈಸೂರು,ಸೆ.16– ಮೈಸೂರು- ಮಲೆನಾಡು ಸ್ಲೀಪರ್ ಸೆಲ್ಗಳ ತಾಣವಾಗುತ್ತಿದೆ, ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಬಾಂಬ್ ಸಿಡಿಸಿದ್ದಾರೆ.
4
+ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಬಾವುಟ ಹಾರಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ.
5
+ ಮಲೆನಾಡು ಸ್ಲೀಪರ್ ಸೆಲ್ಗಳ ತಾಣವಾಗುತ್ತಿದೆ, ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸಲಾಗುತ್ತಿತ್ತು. ಅದನ್ನು ಬಜರಂಗದಳ ಪತ್ತೆ ಮಾಡಿತ್ತು. ದೇಶ ವಿರೋಧಿ ಚಟುವಟಿಕೆ ನಡೆಸಿದವರನ್ನು ಸಮಗ್ರ ತನಿಖೆ ನಡೆಸಬೇಕಿತ್ತು. ಆದರೆ ಯಾರೋ ಪ್ರಭಾವಿಗಳು ಹೇಳಿದ್ದಾರೆಂದು ಪೊಲೀಸರು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ, ಇದು ಸರಿಯಲ್ಲ ಎಂದಿದ್ದಾರೆ.
6
+ ಇದೇ ವೇಳೆ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುನಿರತ್ನ ಆಡಿಯೋ ಪ್ರಕರಣದ ಹಿಂದೆ ಟೂಲ್ ಕಿಟ್ ಕೆಲಸ ಮಾಡಿದೆ. ಹನಮಂತಪ್ಪ ಆಡಿಯೋಯಿಂದ ಇದು ಸಾಬೀತಾಗಿದೆ. ಕಾಂಗ್ರೆಸ್ ತಮ ಪಕ್ಷದವರಿಗೆ ಒಂದು ನ್ಯಾಯ ಬಿಜೆಪಿಗೆ ಒಂದು ನ್ಯಾಯ ಅನ್ನೋ ನೀತಿ ಅನುಸರಿಸುತ್ತಿದ್ದಾರೆ.
7
+ ಕಾಂಗ್ರೆಸ್ ಶಾಸಕ ಚೆನ್ನರೆಡ್ಡಿ ಮೇಲೂ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸುವ ಬದಲು ಸಿಎಂ ತಮ ಮನೆಯಲ್ಲಿ ಬಿರಿಯಾನಿ ಊಟ ಹಾಕಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
8
+ ಕೃಷಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಸಚಿವ ನಾಗೇಂದ್ರ ಸೇರಿ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿದೆ. ಯಾರನ್ನ ಬಂಧಿಸುವ ಕೆಲಸ ಮಾಡಿಲ್ಲ. ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಾದ ದಿನವೇ ಬಂಧಿಸಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ವರದಿ ಬರುವ ಮುನ್ನವೇ ಮುನಿರತ್ನ ಅವರನ್ನು ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.
9
+ ಇನ್ನೂ ಮಂಗಳೂರು ಬಿ.ಸಿ ರೋಡ್ ನಲ್ಲಿ ಹಿಂದುಗಳಿಗೆ ಸವಾಲಾಕಿರುವ ಪ್ರಕರಣದ ಕುರಿತು ಮಾತನಾಡಿರುವ ಸಿ.ಟಿ ರವಿ, ಇದು ಭಾರತದ ದೇಶಕ್ಕೆ ಹಾಕಿರುವ ಸಾವಲು. ಯುದ್ಧವನ್ನು ನಾವು ಯುದ್ಧವಾಗಿಯೇ ಸ್ವೀಕರಿಸಿ ಉತ್ತರ ಕೊಡುತ್ತೇವೆ ಎಂದು ಗುಡುಗಿದ್ದಾರೆ.
10
+ ಹಿಂದೆ ನಮ ಪೂರ್ವಜರು ಕತ್ತಿ ತೋರಿಸಿದಾಗ ಕತ್ತಿಯಿಂದಲೇ ಉತ್ತರ ಕೊಟ್ಟಿದ್ದರು. ಯುದ್ಧಕ್ಕೆ ಸವಾಲು ಹಾಕಿದಾಗ ಯುದ್ಧದ ಮೂಲಕವೇ ಗೆಲ್ಲಬೇಕು. ಸಲಹೆ ಎಲ್ಲಾ ಕೆಲಸ ಮಾಡಲ್ಲ. ನಾವು ಸಹ ಕತ್ತಿಯಿಂದಲೇ ಉತ್ತರ ಕೊಡುತ್ತೇ���ೆ. ಇಲ್ಲವಾದರೇ ನಮ ದೇಶ ಬಾಂಗ್ಲಾದೇಶ, ಪಾಕಿಸ್ತಾನದಂತೆ ಆಗುತ್ತದೆ. ಅದಕ್ಕೆ ನಾವು ಅವಕಾಶ ಕೊಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
eesanje/url_46_17_5.txt ADDED
@@ -0,0 +1,8 @@
 
 
 
 
 
 
 
 
 
1
+ ಭಾರತಕ್ಕೆ ಪ್ರವೇಶಿಸಿದ ನಿಫಾ ವೈರಸ್, ರಾಜ್ಯದಲ್ಲಿ ಹೈ ಅಲರ್ಟ್
2
+ 24--
3
+ ಬೆಂಗಳೂರು,ಸೆ.16– ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾ ವೈರಸ್ಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ನಗರದಲ್ಲಿರುವ ಹೊರ ರಾಜ್ಯದ ವಿದ್ಯಾರ್ಥಿಗಳ ಮೇಲೆ ಹದ್ದಿನಕಣ್ಣಿಟ್ಟಿದ್ದು ಹೊರ ಊರಿನಿಂದ ಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ತೀರ್ಮಾನಿಸಲಾಗಿದೆ.
4
+ ಅದರಲ್ಲೂ ವಿಮಾನ ನಿಲ್ದಾಣ, ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ರಾಜ್ಯದಿಂದ ಹೊರ ಹೋಗುವ ಹಾಗೂ ಒಳಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
5
+ ಕೇರಳದ ಮಲ್ಲಪ್ಪುರಂ ಜಿಲ್ಲೆಯ ನಿಲಂಬೂರು ಗ್ರಾಮದ 23 ವಿದ್ಯಾರ್ಥಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಆತನಿಗೆ ಕೆಲ ದಿನಗಳ ಹಿಂದೆ ಜಾಂಡೀಸ್ ರೀತಿಯ ಕಾಯಿಲೆ ಕಾಣಿಸಿಕೊಂಡಿತ್ತು. ಆರೋಗ್ಯ ಸರಿ ಹೋಗದ ಕಾರಣ ಆತ ತನ್ನ ಊರಿಗೆ ಮರಳಿದ್ದ ಅಲ್ಲಿಯೂ ಆತನಿಗೆ ಸೂಕ್ತ ಚಿಕಿತ್ಸೆ ದೊರೆಯದೆ ಸಾವನ್ನಪ್ಪದ್ದಾನೆ. ಮೃತ ವ್ಯಕ್ತಿಯನ್ನು ತಪಾಸಣೆಗೊಳಪಡಿಸಿದಾಗಾ ಆತನಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
6
+ ಮೃತ ವಿದ್ಯಾರ್ಥಿ ಬೆಂಗಳೂರಿನಲ್ಲಿ ನೆಲೆಸಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಆತಂಕ ಮನೆ ಮಾಡಿರುವ ಹಿನ್ನೆಲೆಯಲ್ಲಿ ಕೇರಳ ಮಾದರಿಯಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಲ್ಲೂ ವಿದ್ಯಾರ್ಥಿ ದಾಖಲಾಗಿದ್ದ ಬೆಂಗಳೂರಿನ ಕಾಲೇಜು ಹಾಗೂ ಆತ ವಾಸಿಸುತ್ತಿದ್ದ ಮನೆ ಮತ್ತಿತರ ಪ್ರದೇಶಗಳಲ್ಲಿ ವಾಸಿಸುತ್ತಿರುವವರನ್ನು ತಪಾಸಣೆಗೊಳಪಡಿಸಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
7
+ ಏನೀದು ನಿಫಾ ಸೋಂಕು; ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ನಿಫಾ ಸೋಂಕು ಮಾರಣಾಂತಿಕವಾಗಿದೆ. ಆರಂಭದಲ್ಲಿ ಸಾಮಾನ್ಯ ಜ್ವರ, ತಲೆನೋವು, ಮಾಂಸಖಂಡಗಳ ಸೆಳೆತದಂತೆ ಕಂಡು ಬಂದು ಕೊನೆಗೆ ಆತನ ಜೀವವನ್ನೇ ನಿಫಾ ವೈರಾಣುಗಳು ಬಲಿ ಪಡೆದುಕೊಳ್ಳುತ್ತದೆ.
8
+ ನಿಫಾ ಸೋಂಕಿಗೆ ಇದುವರೆಗೂ ಯಾವುದೇ ನಿರ್ದಿಷ್ಟ ಚಿಕಿತ್ಸೆ ಎಂಬುದಿಲ್ಲ. ಆದರೆ, ಸಾಮಾನ್ಯ ರೋಗಿಗೆ ನೀಡುವ ಚಿಕಿತ್ಸೆ ನೀಡಬೇಕಾಗುತ್ತದೆ. ಹೀಗಾಗಿ ನಿಫಾ ಸೋಂಕಿನ ಬಗ್ಗೆ ಎಚ್ಚರವಹಿಸುವ ಅಗತ್ಯವಿದೆ.
eesanje/url_46_17_6.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಹಂತ ಹಂತವಾಗಿ 2.5 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ
2
+ 2.5 :
3
+ ಕಲಬುರಗಿ,ಸೆ. 16-ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹ್ದುೆಗಳು ಖಾಲಿ ಇದ್ದು ಹಂತಹಂತವಾಗಿ ಭರ್ತಿ ಮಾಡ ಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ ಎಂದರು.
4
+ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಬೆಳಿಗ್ಗೆ ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
5
+ ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದರು.
6
+ ನಮ ಭಾಗದ ಎಲ್ಲ ಶಾಸಕರ ಬೇಡಿಕೆಯ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕೋ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಸಲ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ ಎಂದು ಹೇಳಿದರು.
7
+ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹ್ದುೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು ತಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ ಇಲಾಖೆಯಲ್ಲಿಯೇ 800 ಇಂಜಿನಿರ್ಯ ಗಳ ಹ್ದುೆ ಭರ್ತಿ ಮಾಡಲಾಗಿದೆ ಎಂದರು.
8
+ ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು ಎಂದು ಹೇಳಿದ ಖರ್ಗೆ, ಕಲಬುರಗಿ ಹಾಗೂ ಬೀರ್ದ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು.
9
+ ಇದೇ ವೇಳೆ ರಾಜಕೀಯ ಆರೋಪಗಳಿಗೆ ತಿರುಗೇಟು ನೀಡಿದ ಪ್ರಿಯಾಂಕ್ ಖರ್ಗೆ, ಕೆಲವರು ಇಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ, ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ಸಚಿವರೂ ಆಗಮಿಸುತ್ತಾರೆ ಎಂಬ ಕಾರಣಕ್ಕೆ ಕೆಲವರು ಪ್ರತಿಭಟನೆ ನಡೆಸುತ್ತಿದ್ದಾರೆ, ಇದು ಅನಾವಶ್ಯಕ, ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲಾಗುತ್ತದೆ. ಮುಜುಗರ ಉಂಟುಮಾಡಬೇಕು ಎಂಬ ಕಾರಣಕ್ಕಾಗಿಯೇ ಪ್ರತಿಭಟನೆ ಮಾಡುವವರಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದರು.
10
+ ಪ್ರತಿಭಟನೆ ಮಾಡುವುದಿದ್ದರೆ ಶಾಸಕ ಮುನಿರತ್ನ ವಿರುದ್ದ ಮಾಡಲಿ ಅದಕ್ಕೂ ಮೊದಲು ಶಿಕ್ಷಣ ಸಂಸ್ಥೆಗಾಗಿ ಪಡೆದ ಜಾಗದಲ್ಲಿ ಬಿರಿಯಾನಿ ಹೊಟೇಲ್ ನಡೆಸುತ್ತಿರುವುದರ ಬಗ್ಗೆ ಸ್ಪಷ್ಟನೆ ನೀಡಲಿ. ಅದು ಬಿಟ್ಟು ಇಲ್ಲಿ ಬಂದು ಡ್ರಾಮಾ ಮಾಡಬಾರದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಾಂಗ್ ನೀಡಿದರು.ಫಾಸ್ಟ್ ಟ್ರಾಕ್ ಕೋರ್ಟ್ ಆಗಬೇಕಿರುವುದು ಬಿಜೆಪಿ ಹಗರಣದ ಬಗ್ಗೆ ವಿಚಾರಣೆ ನಡೆಸಲು ಹೊರತು ದರ್ಶನ್ ಕೇಸ್ ಬಗ್ಗೆ ವಿಚಾರಣೆ ನಡೆಸಲು ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
11
+ ನಾಗಮಂಗಲ ಗಲಭೆ ವಿಚಾರ, ಸಮಗ್ರ ತನಿಖೆ ನಡೆಸಲಾಗುತ್ತಿದೆ. ಅದರ ಹಿಂದೆ ಯಾರೇ ಇದ್ದರೂ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಈಗಾಗಲೇ ಹೇಳಿದ್ದಾರೆ ಎಂದು ಖರ್ಗೆ, ಗಲಭೆ ಬಗ್ಗೆ ಪರಿಶೀಲನೆ ಮಾಡಲು ಬಿಜೆಪಿ ಸತ್ಯಶೋಧನೆ ಸಮತಿ ರಚಿಸಿರುವ ಬಗ್ಗೆ ವ್ಯಂಗ್ಯವಾಡಿದರು. ರಾಜ್ಯದಲ್ಲಿ ಬರಗಾಲ ಇದ್ದಾಗ ಬಿಜೆಪಿ ಯಾಕೆ ಸತ್ಯಶೋಧನೆ ಸಮಿತಿ ರಚನೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.
12
+ ನಾಗಮಂಗಲ ಗಲಭೆ ಬಗ್ಗೆ ಮಾತನಾಡುವ ಪ್ರಧಾನಿ ಯಡಿಯೂರಪ್ಪನವರ ಪೋಕ್ಸೋ ಕೇಸಿನ ಬಗ್ಗೆ, ಮುನಿರತ್ನ ಕೇಸಿನ ಬಗ್ಗೆ ಏಕೆ ಮಾತನಾಡಲ್ಲ ? ಅವರಿಗೆ ಮಾಹಿತಿ ಹೋಗಿರುತ್ತದೆ ತಾನೇ ? ಎಂದು ಪ್ರಿಯಾಂಕ್ ಪ್ರಶ್ನಿಸಿದರು.
eesanje/url_46_17_7.txt ADDED
@@ -0,0 +1,8 @@
 
 
 
 
 
 
 
 
 
1
+ ಆರ್‌ಎಸ್‌‍ಎಸ್‌‍ ಕಚೇರಿಗೆ ನುಗ್ಗಿ ಅನುಚಿತ ವರ್ತಿಸಿದ ಪೋಲಿಸರು ಕ್ಷಮೆಯಾಚಿಸಬೇಕು : ವಿಜಯೇಂದ್ರ
2
+ :
3
+ ಬೆಂಗಳೂರು,ಸೆ.16-ಪಾಂಡವಪುರದ ಆರ್‌ಎಸ್‌‍ಎಸ್‌‍ ಕಚೇರಿಗೆ ಪೋಲಿಸರು ನುಗ್ಗಿದ ಘಟನೆ ಅತ್ಯಂತ ಖಂಡನೀಯ. ಸರ್ಕಾರ ಈ ಕೂಡಲೇ ಘಟನೆಯ ಕುರಿತು ಕ್ಷಮೆಯಾಚಿಸಲಿ ಪೊಲೀಸ್‌‍ ದರ್ಪ ಮೆರೆದ ಅಧಿಕಾರಿಗಳನ್ನು ಅಮಾನತ್ತಿನಲ್ಲಿಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
4
+ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಆರ್‌ಎಸ್‌‍ಎಸ್‌‍ ಕಚೇರಿಗೆ ಪೊಲೀಸರು ನುಗ್ಗಿರುವ ಘಟನೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಸಂವಿಧಾನ ವಿರೋಧಿ ಕ್ರಮ ಹಾಗೂ ಹಿಂದೂ ಸಮಾಜವನ್ನು ಪ್ರಚೋದಿಸುವ ನಡವಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
5
+ ಮೊನ್ನೆ ಗಣೇಶೋತ್ಸವ ಮೆರವಣಿಗೆಯ ಮೇಲೆ ನಡೆದ ಗಲಭೆಯಿಂದಾಗಿ ನಾಗಮಂಗಲ ಇನ್ನು ಸಹಜ ಸ್ಥಿತಿಯತ್ತ ಮರಳುತ್ತಿಲ್ಲ ಈ ನಡುವೆ ಬೆಂಕಿಗೆ ತುಪ್ಪ ಸುರಿದಂತೆ ಪೋಲಿಸರು ನಿನ್ನೆ ರಾತ್ರಿ ಪಾಂಡವಪುರದ ಆರ್‌.ಎಸ್‌‍.ಎಸ್‌‍ ಕಚೇರಿಗೆ ನುಗ್ಗಿ ಅನುಚಿತ ವರ್ತನೆ ತೋರಿದ್ದಾರೆ, ಪೊಲೀಸರ ಮೂಲಕ ಕಾಂಗ್ರೆಸ್‌‍ ಸರ್ಕಾರ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸುವ ದಾಟಿಯಲ್ಲಿ ವರ್ತಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
6
+ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆಯೋ ಅಥವಾ ಹಿಂದೂ ಮನಸ್ಥಿತಿಯ ವಿರೋಧಿ ಸರ್ಕಾರದ ನೆರಳಿನಲ್ಲಿದ್ದೇವೆಯೋ ಎಂಬ ಆತಂಕ ಹಿಂದೂ ಸಮಾಜವನ್ನು ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
7
+ ನೈಜ ರಾಷ್ಟ್ರೀಯತೆಯನ್ನು ಪ್ರತಿಪಾದಿಸುವ ಭಾರತೀಯ ಸಮಾಜ ಕಟ್ಟುವ ಉದಾತ್ತ ಉದ್ದೇಶದಿಂದ ಜನತಳೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌‍ಎಸ್‌‍)ವನ್ನು ನಿರ್ಬಂಧಿಸಲು ಕಾಂಗ್ರೆಸ್‌‍, ನೆಹರು ಕಾಲದಿಂದಲೂ ಯತ್ನಿಸುತ್ತಲೇ ಬಂದಿದೆ ಎಂದು ಆರೋಪಿಸಿದ್ದಾರೆ.
8
+ ಸಮರ್ಪಣೆಯ ಬದ್ಧತೆ, ತ್ಯಾಗದ ಪರಿಪೂರ್ಣತೆಯನ್ನು ಮೈಗೂಡಿಸಿಕೊಂಡಿರುವ ಕೋಟ್ಯಾಂತರ ಸ್ವಯಂಸೇವಕರ ಮಹಾಪಡೆಯನ್ನು ಹೊಂದಿರುವ ಆರ್‌ಎಸ್‌‍ಎಸ್‌‍, ದಬ್ಬಾಳಿಕೆ ಎದುರಾದಷ್ಟು ಹೆಮರವಾಗಿ ಬೆಳೆಯುತ್ತಲೇ ಇರುತ್ತದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅರಿತು ನಡೆದರೆ ಒಳಿತು ಎಂದು ಅವರು ಎಚ್ಚರಿಸಿದ್ದಾರೆ.