CoolCoder44 commited on
Commit
ff7afc1
·
verified ·
1 Parent(s): 10a99f6

b6acd1d2b61b44236962d12b60caa20de462eb4f20ddf0035f95c8c94594027d

Browse files
Files changed (50) hide show
  1. eesanje/url_46_338_11.txt +6 -0
  2. eesanje/url_46_338_12.txt +15 -0
  3. eesanje/url_46_338_2.txt +7 -0
  4. eesanje/url_46_338_3.txt +6 -0
  5. eesanje/url_46_338_4.txt +10 -0
  6. eesanje/url_46_338_5.txt +7 -0
  7. eesanje/url_46_338_6.txt +6 -0
  8. eesanje/url_46_338_7.txt +5 -0
  9. eesanje/url_46_338_8.txt +14 -0
  10. eesanje/url_46_338_9.txt +9 -0
  11. eesanje/url_46_339_1.txt +11 -0
  12. eesanje/url_46_339_10.txt +9 -0
  13. eesanje/url_46_339_11.txt +7 -0
  14. eesanje/url_46_339_12.txt +8 -0
  15. eesanje/url_46_339_2.txt +10 -0
  16. eesanje/url_46_339_3.txt +8 -0
  17. eesanje/url_46_339_4.txt +10 -0
  18. eesanje/url_46_339_5.txt +7 -0
  19. eesanje/url_46_339_6.txt +7 -0
  20. eesanje/url_46_339_7.txt +8 -0
  21. eesanje/url_46_339_8.txt +9 -0
  22. eesanje/url_46_339_9.txt +6 -0
  23. eesanje/url_46_33_1.txt +6 -0
  24. eesanje/url_46_33_10.txt +7 -0
  25. eesanje/url_46_33_11.txt +12 -0
  26. eesanje/url_46_33_12.txt +13 -0
  27. eesanje/url_46_33_2.txt +11 -0
  28. eesanje/url_46_33_3.txt +8 -0
  29. eesanje/url_46_33_4.txt +9 -0
  30. eesanje/url_46_33_5.txt +6 -0
  31. eesanje/url_46_33_6.txt +5 -0
  32. eesanje/url_46_33_7.txt +7 -0
  33. eesanje/url_46_33_8.txt +9 -0
  34. eesanje/url_46_33_9.txt +7 -0
  35. eesanje/url_46_340_1.txt +10 -0
  36. eesanje/url_46_340_10.txt +12 -0
  37. eesanje/url_46_340_11.txt +10 -0
  38. eesanje/url_46_340_12.txt +8 -0
  39. eesanje/url_46_340_2.txt +31 -0
  40. eesanje/url_46_340_3.txt +8 -0
  41. eesanje/url_46_340_4.txt +6 -0
  42. eesanje/url_46_340_5.txt +7 -0
  43. eesanje/url_46_340_6.txt +6 -0
  44. eesanje/url_46_340_7.txt +6 -0
  45. eesanje/url_46_340_8.txt +6 -0
  46. eesanje/url_46_340_9.txt +6 -0
  47. eesanje/url_46_341_1.txt +12 -0
  48. eesanje/url_46_341_10.txt +8 -0
  49. eesanje/url_46_341_11.txt +16 -0
  50. eesanje/url_46_341_12.txt +12 -0
eesanje/url_46_338_11.txt ADDED
@@ -0,0 +1,6 @@
 
 
 
 
 
 
 
1
+ ಕನ್ನಡದ ಬಗ್ಗೆ ಅವಹೇಳನ ಬರಹ ಪ್ರಕಟಿಸಿದ್ದ ಪಶ್ಚಿಮ ಬಂಗಾಳ ಯುವಕನ ಬಂಧನ
2
+ ಬೆಂಗಳೂರು, ಅ.1- ಸಾಮಾಜಿಕ ಜಾಲತಾಣ ಇನ್‍ಸ್ಟ್ರಾಗ್ರಾಮ್‍ನಲ್ಲಿ ಕರ್ನಾಟಕ, ಬೆಂಗಳೂರು ಜನರು ಹಾಗೂ ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಪಶ್ಚಿಮ ಬಂಗಾಳದ ಯುವಕನನ್ನು ಕೊಡಿಗೆ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್‍ಟಿ ನಗರದಲ್ಲಿ ವಾಸವಾಗಿದ್ದ ನಿಲಯ್ ಮಂಡಲ್ (23) ಬಂಧಿತ ಯುವಕ. ಈತ ಕೊಡಿಗೆಹಳ್ಳಿಯಲ್ಲಿರುವ ಕಂಪೆನಿಯೊಂದರ ಉದ್ಯೋಗಿ.
3
+ ನಗರದಲ್ಲಿ ವಾಸವಾಗಿದ್ದುಕೊಂಡು ಈ ಯುವಕ ಕರ್ನಾಟಕದ ಬಗ್ಗೆ ಕೆಟ್ಟದಾಗಿ ಅವಹೇಳನ ಮಾಡಿದ್ದಲ್ಲದೆ, ಉತ್ತರ ಭಾರತದವರು ಬೆಂಗಳೂರಿನಿಂದ ಹೊರಟು ಹೋದರೆ ಬೆಂಗಳೂರಿಗರು ಕಾಡು ಜನರಿಗೆ ಸಮವಾಗುತ್ತಾರೆ ಎಂದು ಅತಿರೇಕವಾಗಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದಾನೆ.
4
+ ರಾಜ್ಯ, ಜನ, ಕನ್ನಡ ಭಾಷೆ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿದ ಬರಹದಿಂದ ರಾಜ್ಯದ ಜನರ ನಡುವೆ ಗೊಂದಲ ಸೃಷ್ಟಿಸಿ ಭಾಷೆ ಮತ್ತು ವಾಸ ಮಾಡುವ ಸ್ಥಳ, ಇತ್ಯಾದಿಗಳ ಆಧಾರದ ಮೇಲೆ ದ್ವೇಷವನ್ನುಂಟು ಮಾಡುವ ಮತ್ತು ಸೌಹಾರ್ದತೆಗೆ ಬಾಧಕವಾಗುವ ರೀತಿ ಸಾಮಾಜಿಕ ಜಾಲತಾಣ ಇನ್‍ಸ್ಟ್ರಾಗ್ರಾಮ್‍ನಲ್ಲಿ ಸಂದೇಶವನ್ನು ಫೋಸ್ಟ್ ಮಾಡಿದ್ದನು.
5
+ ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ
6
+ ಈ ಬಗ್ಗೆ ಅನೇಕ ಕನ್ನಡಪರ ಸಂಘಟನೆಗಳು, ಕಾರ್ಯಕರ್ತರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ, ಕೆಲಸ ಮಾಡುತ್ತಿದ್ದ ಕಂಪೆನಿ ಹಾಗೂ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಕೀಳು ಅಭಿಪ್ರಾಯದ ವಿರುದ್ಧ ಕಂಪೆನಿ ಸಹ ಆತನ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿತ್ತು. ಈ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಕೊಡಿಗೆಹಳ್ಳಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
eesanje/url_46_338_12.txt ADDED
@@ -0,0 +1,15 @@
 
 
 
 
 
 
 
 
 
 
 
 
 
 
 
 
1
+ ಎಸ್.ಎಂ.ಕೃಷ್ಣ ಅಭಿವೃದ್ಧಿ ಹರಿಕಾರ-ಆದರ್ಶ ನಾಯಕ : ಡಿಕೆಶಿ ಬಣ್ಣನೆ
2
+ ಬೆಂಗಳೂರು,ಅ.1- ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು ಮೆಟ್ರೋ ಯೋಜನೆಯಂತಹ ದೂರದೃಷ್ಟಿಯುಳ್ಳ ಮಹತ್ವದ ಯೋಜನೆಗಳನ್ನು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದು ಬೆಂಗಳೂರಿಗೆ ಅಂತಾರಾಷ್ಟ್ರೀಯ ಮನ್ನಣೆಯನ್ನು ತಂದುಕೊಟ್ಟವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.
3
+ ಚಿತ್ರಕಲಾ ಪರಿಷತ್‍ನಲ್ಲಿಂದು ಹಮ್ಮಿಕೊಂಡಿದ್ದ ಸ್ವಪ್ನ ಬುಕ್‍ಹೌಸ್ ಪ್ರಕಾಶನದಿಂದ ಪ್ರಕಟಗೊಂಡ ಡಾ.ಎನ್.ಜಗದೀಶ್ ಕೊಪ್ಪ ಅವರು ರಚಿಸಿರುವ ಎಸ್.ಎಂ.ಕೃಷ್ಣ ಅವರ ಜೀವನಗಾಥೆ ಆಧರಿಸಿದ ನೆಲದ ಸಿರಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಡಿನ ಹಿತಕ್ಕಾಗಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಸ್ಥಾನವನ್ನು ತ್ಯಾಗ ಮಾಡಲು ಮುಂದಾಗಿದ್ದರು ಎಂದು ಹೇಳಿದರು.
4
+ ಅವರ ರಾಜಕೀಯ ಜೀವನದಲ್ಲಿ ಸಾಕಷ್ಟು ಜನರಿಗೆ ಒಳ್ಳೆಯದನ್ನು ಮಾಡಿರುವುದು ಬಿಟ್ಟರೆ ಬೇರೆಯವರಿಗೆ ತೊಂದರೆ ಕೊಡಲಿಲ್ಲ. ರಾಜಕೀಯವಾಗಿ ನನ್ನಂತಹ ಹತ್ತಾರು ನಾಯಕರನ್ನು ಎಲ್ಲ ಸಮುದಾಯದಲ್ಲೂ ಬೆಳೆಸಿದ್ದಾರೆ ಎಂದರು.
5
+ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
6
+ ಮುಖ್ಯಮಂತ್ರಿಯಾಗಿ ನಾಲ್ಕೂವರೆ ವರ್ಷದ ಆಡಳಿತಾವಧಿಯಲ್ಲಿ ಎಸ್.ಎಂ.ಕೃಷ್ಣ ಅವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಅವರು ಏನನ್ನು ತೆಗೆದುಕೊಂಡು ಹೋಗಲಿಲ್ಲ. ಅವರ ಆದರ್ಶ, ನಾಯಕತ್ವವನ್ನು ನೀಡಿದ್ದಾರೆ. ನನಗೆ ರಾಜಕೀಯ ಮರುಜನ್ಮ ನೀಡಿದವರು ಎಂದು ಹೇಳಿದರು.
7
+ ಅವರ ಆಡಳಿತ ಅವಧಿಯಲ್ಲಿ ರಾಜ್ಯವು ತೀವ್ರ ಬರ, ಕಾವೇರಿ ನೀರಿನ ಹಂಚಿಕೆ ಸಮಸ್ಯೆ, ವರನಟ ಡಾ.ರಾಜ್‍ಕುಮಾರ್ ಅಪಹರಣ, ಆರ್ಥಿಕ ಸಂಕಷ್ಟ ಇದ್ದರೂ ರಾಜ್ಯವು ಯಶಸ್ಸನ್ನು ಕಂಡಿತ್ತು. ಕೃಷ್ಣ ಅವರ ಕಾಲ ಎಂದು ಬಿಂಬಿಸುವಂತಾಯಿತು ಎಂದರು. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವಿಕಾಸಸೌಧ, ಉದ್ಯೋಗಸೌಧ ಹಾಗೂ ಬೆಂಗಳೂರು ಮೆಟ್ರೊ ಯೋಜನೆ ಅವರ ಆಡಳಿತಾವಯ ಕೊಡುಗೆಗಳು ಎಂದು ಬಣ್ಣಿಸಿದರು.
8
+ ಶಾಲೆ ಬಿಡುವ ಮಕ್ಕಳನ್ನು ಮರಳಿ ಶಾಲೆಗೆ ತರಲು ದೇಶದಲ್ಲಿಯೇ ಮೊದಲ ಬಾರಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಜಾರಿಗೆ ತಂದರು. ಅದು ಈಗಲೂ ಮುಂದುವರೆದಿದೆ. ಹೆಣ್ಣುಮಕ್ಕಳ ಆರ್ಥಿಕ ಸಬಲೀಕರಣಕ್ಕಾಗಿ ಸ್ತ್ರೀ ಶಕ್ತಿ ಸಂಘಗಳ ಕಾರ್ಯಕ್ರಮಗಳನ್ನು ಜಾರಿಗೆ ತರಲಾಯಿತು. ಸುಮಾರು ನಾಲ್ಕೂವರೆ ಕೋಟಿ ಮಹಿಳೆಯರು ವಿವಿಧ ಸಂಘಗಳ ಸದಸ್ಯರಾಗಿದ್ದು, ಶೇ.95ರಷ್ಟು ಹಣ ಮರುಪಾವತಿಯಾಗುತ್ತಿದೆ.
9
+ ಗ್ರಾಮೀಣ ಹಾಗೂ ಬಡಜನರ ಆರೋಗ್ಯಕ್ಕಾಗಿ ಯಶಸ್ವಿನಿಧಿ ಯೋಜನೆಯನ್ನು ಜಾರಿಗೆ ತರಲಾಯಿತು. ಮೊದಲ ಬಾರಿಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಯಿತು ಎಂದರು.ವಿಮಾನ ನಿಲ್ದಾಣದ ಉದ್ಘಾಟನೆಗೆ ಬಂದಿದ್ದ ಆಗಿನ ಪ್ರಧಾನಿ ವಾಜಪೇಯಿ ಅವರು ಕೃಷ್ಣ ಅವರ ಆಡಳಿತದಿಂದಾಗಿ ವಿಶ್ವದ ನಾಯಕರು ಬೆಂಗಳೂರಿನತ್ತ ಗಮನಹರಿಸುವಂತಾಗಿದೆ ಎಂದು ಬಣ್ಣಿಸಿದ್ದರೆಂದು ಡಿ.ಕೆ.ಶಿವಕುಮಾರ್ ಸ್ಮರಿಸಿದರು. ಭೂಮಿ ಯೋಜನೆ , ಪಾನೀಯ ನಿಗಮ ಅವರ ಕಾಲದಲ್ಲೇ ಸ್ಥಾಪನೆಯಾಯಿತು. ಅವರಿಗೆ ರಾಜ್ಯದ ಹಿತ ಮುಖ್ಯವಾಗಿತ್ತೇ ಹೊರತು ಬೇರೆನೂ ಇಲ್ಲ ಎಂದು ಹಲವು ನಿದರ್ಶನಗಳನ್ನು ನೀಡಿ ವಿಶ್ಲೇಷಿಸಿದರು.
10
+ ಅವರನ್ನು ಕುರಿತಾದ ನೆಲದಸಿರಿ ಪುಸ್ತಕ ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿದೆ. ಅವರು ತಮ್ಮದೇ ಆದ ಇತಿಹಾಸವನ್ನು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ನಿರ್ಮಿಸಿದ್ದಾರೆ ಎಂದು ಹೇಳಿದರು.
11
+ ಪಕ್ಷಾತೀತ ವ್ಯಕ್ತಿ:ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಜಾಗತಿಕ ನೆಲೆಯಲ್ಲಿ ಗುರುತಿಸಿಕೊಳ್ಳಬೇಕಾದ ಮಾದರಿ ರಾಜಕಾರಣಿ. ಅಷ್ಟೇ ಅಲ್ಲ ಪಕ್ಷಾತೀತ ವ್ಯಕ್ತಿ. ಅವರು ಕನ್ನಡಿಗರ ಹೆಮ್ಮೆ ಎಂದು ಹಿರಿಯ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಬಣ್ಣಿಸಿದರು.
12
+ ನೆಲದ ಸಿರಿ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಾಹಿತ್ಯದ ಸಂಪರ್ಕ ಅಗತ್ಯ. ಮಹಾತ್ಮ ಗಾಂ, ಜವಾಹರ್‍ಲಾಲ್ ನೆಹರು ಸೇರಿದಂತೆ ಶ್ರೇಷ್ಠ ರಾಜಕೀಯ ಚಿಂತಕರು ಸ್ವತಃ ಸಾಹಿತಿಗಳಾಗಿದ್ದರು ಇಲ್ಲವೇ ಸಾಹಿತ್ಯದ ಸಂಪರ್ಕವುಳ್ಳವರಾಗಿ ದ್ದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಲೋಹಿಯ ಕೂಡ ಸಾಹಿತ್ಯದ ನಿಕಟ ಸಂಪರ್ಕ ಹೊಂದಿದ್ದರು ಎಂದರು ಹೇಳಿದರು.
13
+ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಳಗಾವಿಯಲ್ಲಿ ವೇದಿಕೆ ಸಿದ್ದ
14
+ ಎಸ್.ಎಂ.ಕೃಷ್ಣ ಅವರು ಸಾಹಿತ್ಯ, ಸಂಗೀತ, ಕ್ರೀಡೆ ಬಗ್ಗೆ ಆಸಕ್ತಿಯುಳ್ಳ ಸಂವೇದನಾಶೀಲ ವ್ಯಕ್ತಿ. ಚಿತ್ರಕಲಾ ಪರಿಷತ್ ಸಾಂಸ್ಕøತಿಕ ಕೇಂದ್ರವಾಗಲು ಇವರ ಕೊಡುಗೆ ಕಾರಣ. ನೆಲದ ಸಿರಿ ಕೃತಿ ಕೇವಲ ಕೃಷ್ಣಾ ಅವರ ಜೀವನಗಾಥೆಯಲ್ಲ. ಭಾರತದ ಒಂದು ಕಾಲಘಟ್ಟದ ರಾಜಕೀಯ ಸಾಂಸ್ಕøತಿಕ ಮಹತ್ವವನ್ನು ಬಿಂಬಿಸುವ ಚರಿತ್ರೆ. ರಾಜಕೀಯ, ಸಾಮಾಜಿಕ, ಸಾಂಸ್ಕøತಿಕ ಪಠ್ಯವಾಗಿ ಈ ಕೃತಿಯನ್ನು ಅಧ್ಯಯನ ಮಾಡಬೇಕು. ಜಗದೀಶ್ ಕೊಪ್ಪ ಅವರು ವಸ್ತುನಿಷ್ಠವಾಗಿ, ಮುಕ್ತ ಮನಸ್ಸಿನಿಂದ ನೆಲದ ಸಿರಿಯನ್ನು ವಿಶ್ಲೇಷಣೆ ಮಾಡಿ ರಚಿಸಿದ್ದು, ಓದಿಸಿಕೊಂಡು ಹೋಗುವಂತಹ ಕೃತಿಯಾಗಿದೆ ಎಂದು ವಿಶ್ಲೇಷಿಸಿದರು.
15
+ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಹಿರಿಯ ಸಾಹಿತಿ ಡಾ.ಹಂಪಾನಾಗರಾಜಯ್ಯ, ಕೃತಿಕಾರ ಎನ್.ಜಗದೀಶ್ ಕೊಪ್ಪ, ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್.ಶಂಕರ್, ಮಾಜಿ ಸಚಿವರಾದ ಡಾ.ಕೆ.ಸುಧಾಕರ್, ನಫೀಜ ಫಜಲ್, ವಿಧಾನಪರಿಷತ್ ಸದಸ್ಯರಾದ ಅ.ದೇವೇಗೌಡ, ದಿನೇಶ್ ಗೂಳಿಗೌಡ, ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ, ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ ಮತ್ತಿತರರು ಇದ್ದರು.
eesanje/url_46_338_2.txt ADDED
@@ -0,0 +1,7 @@
 
 
 
 
 
 
 
 
1
+ ಭೂಮಿ ಸಾಫ್ಟ್ ವೇರ್ ಮಾದರಿಯಲ್ಲಿ ಗ್ರಾ.ಪಂಗಳ ಅಸ್ತಿ ಸಂರಕ್ಷಣೆಗೆ ಕ್ರಮ : ಡಿಸಿಎಂ
2
+ ಬೆಂಗಳೂರು,ಅ.2- ಭೂಮಿ ಸಾಫ್ಟ್‍ವೇರ್ ಮಾದರಿಯಲ್ಲಿ ಗ್ರಾಮಪಂಚಾಯಿತಿಗಳು ಸ್ಥಿರಾಸ್ತಿಗಳ ದಾಖಲಾತಿಗಳನ್ನು ಸಂರಕ್ಷಿಸಿ ದುರುಪಯೋಗವನ್ನು ತಡೆಗಟ್ಟಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.
3
+ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಸ್ವಚ್ಛ ಸರ್ವೇಕ್ಷಣ ರಾಜ್ಯಮಟ್ಟದ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲೂ ನಮ್ಮ ಸ್ವತ್ತು ಎಂಬ ವ್ಯವಸ್ಥೆಯ ಮೂಲಕ ಆಸ್ತಿ ದಾಖಲಾತಿಗಳ ದುರುಪಯೋಗವನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
4
+ ಗ್ರಾಮ ಪಂಚಾಯಿತಿಗಳು ಸ್ವಾವಲಂಬಿ ಆರ್ಥಿಕತೆಯನ್ನು ರೂಢಿಸಿಕೊಳ್ಳಬೇಕು. ತೆರಿಗೆಯನ್ನು ಹೆಚ್ಚು ವಸೂಲಿ ಮಾಡಬೇಕು. ಗ್ರಾಮ ಪಂಚಾಯಿತಿ ಸದಸ್ಯರು, ಗುತ್ತಿಗೆದಾರರು ಹಾಗೂ ಕಮಿಷನ್‍ಗೆ ಆದ್ಯತೆ ನೀಡದೆ, ಉತ್ತಮ ಕೆಲಸ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
5
+ ಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ 43 ಮಂದಿ ಬಂಧನ : ಸಿಎಂ
6
+ ನರೇಗಾ ಯೋಜನೆ ಮೂಲಕ ಗ್ರಾಮೀಣ ಭಾಗದಲ್ಲಿ ಶಾಶ್ವತ ಆಸ್ತಿಗಳು ನಿರ್ಮಾಣಗೊಳ್ಳುತ್ತಿವೆ, ಆರ್ಥಿಕ ಸಬಲೀಕರಣ ಹೆಚ್ಚಾಗಿದೆ, ಪ್ರತಿ ಪಂಚಾಯಿತಿಯಲ್ಲೂ ಸುಮಾರು 5 ಕೋಟಿ ರೂ.ವರೆಗೂ ಕೆಲಸಗಳಾಗುತ್ತಿವೆ. ಸ್ಥಳೀಯವಾಗಿ ಕೆಲಸಗಳನ್ನು ಮಾಡಲು ಯಾರ ಅನುಮತಿಯ ಅಗತ್ಯವೂ ಇಲ್ಲ ಎಂದು ಹೇಳಿದರು.
7
+ ಇದೇ ವೇಳೆ ಮುಖ್ಯಮಂತ್ರಿಯವರು ಬಾಪೂಜಿ ಸೇವಾಕೇಂದ್ರಗಳಲ್ಲಿ 44 ಸೇವೆಗಳನ್ನು ಪೂರೈಸುವುದಕ್ಕೆ ಚಾಲನೆ ನೀಡಿದರು. 800 ಪಂಚಾಯಿತಿಗಳಿಗೆ ಸ್ಮಾರ್ಟ್‍ಫೋನ್ ಮತ್ತು ಲ್ಯಾಪ್‍ಟಾಪ್‍ಗಳನ್ನು ವಿತರಿಸಿದರು.
eesanje/url_46_338_3.txt ADDED
@@ -0,0 +1,6 @@
 
 
 
 
 
 
 
1
+ ಗ್ರಾಮಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಪಂಚಮಿತ್ರ ಸಹಾಯವಾಣಿ
2
+ ಬೆಂಗಳೂರು, ಅ.2-ರಾಜ್ಯದ ಪ್ರತಿಯೊಂದು ಗ್ರಾಮಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಪಂಚಮಿತ್ರ ಎಂಬ ಸಹಾಯವಾಣಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಸ್ವಚ್ಛ ಸರ್ವೇಕ್ಷಣ ರಾಜ್ಯಮಟ್ಟದ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕೆ ಮಾಹಿತಿ ತಂತ್ರಜ್ಞಾನ ವಲಯದಂತೆ ಪಂಚಾಯಿತಿಗಳಲ್ಲೂ ಸುಗಮ ಆಡಳಿತಕ್ಕಾಗಿ ನೂತನ ನೀತಿ ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
3
+ ಮುಂದಿನ ವರ್ಷದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿಯನ್ನು ಪಾರದರ್ಶಕವಾಗಿ ಜಾರಿಗೊಳಿಸಲಾಗುವುದು. ಪಿಡಿಒ ಗಳನ್ನು ಹೆಚ್ಚು ಉತ್ತರದಾಯಿ ಹಾಗೂ ಹೊಣೆಗಾರರನ್ನಾಗಿಸುವ ನಿಟ್ಟಿನಲ್ಲಿ ಜಿಪಿಎಸ್ ಪೆನ್ಸಿಂಗ್ ಅಳವಡಿಸಲಾಗಿದೆ. ಈ ಮೂಲಕ ಗ್ರಾಮ ಪಂಚಾಯಿತಿ ಅಧಿಕಾರಿ ಎಲ್ಲಿ ತಿರುಗಾಡುತ್ತಿದ್ದಾರೆ, ಎಷ್ಟು ದಿನ ಕೆಲಸಕ್ಕೆ ಹಾಜರಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಸಾಧ್ಯ, ಅಧಿಕಾರಿ ಕೆಲಸ ಮಾಡಿದ ದಿನಕ್ಕಷ್ಟೆ ವೇತನ ನೀಡುವ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದರು.
4
+ ಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್
5
+ ಗ್ರಾಮಮಟ್ಟದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪಂಚಮಿತ್ರ ಎಂಬ ಸಹಾಯವಾಣಿಯನ್ನು ಇನ್ನೆರಡು ತಿಂಗಳಲ್ಲಿ ಆರಂಭಿಸಲಾಗುವುದು. ಇದು ರಾಜ್ಯಾದ್ಯಂತ ಎಲ್ಲಾ ಪಂಚಾಯಿತಿಗಳ ವ್ಯವಸ್ಥೆಗೂ ಅನ್ವಯವಾಗಲಿದೆ. ಪಂಚತಂತ್ರ-2 ಸಾಫ್ಟ್ವೇರ್ ಮೂಲಕ ಮುಂದಿನ ದಿನಗಳಲ್ಲಿ 2 ರಿಂದ 3 ಸಾವಿರ ಕೋಟಿ ತೆರಿಗೆ ಸಂಗ್ರಹಿಸಲು ಸಾಧ್ಯವಾಗಲಿದೆ.
6
+ ಪಂಚಾಯಿತಿ ಸಭೆಗಳ ಮಾಹಿತಿ ಕೂಡ ಇದರಲ್ಲಿ ದಾಖಲಾಗಲಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ 70 ಸಾವಿರ ಸಭೆಗಳು ನಡೆದಿವೆ. ಪಿಡಿಒ ಗಳ ಹಾಜರಾತಿ ಮೇಲೆ ಇದೇ ವ್ಯವಸ್ಥೆಯಲ್ಲಿ ನಿಗಾ ವಹಿಸಲಾಗುವುದು ಎಂದು ಹೇಳಿದರು. ಪಂಚಾಯಿತಿ ವ್ಯವಸ್ಥೆಗಳನ್ನು ಮತ್ತಷ್ಟು ಪ್ರಜಾಪ್ರಭುತ್ವ ಹಾಗೂ ಆರ್ಥಿಕ ಸಬಲೀಕರಣ ಮಾಡಲು ನಿರಂತರವಾಗಿ ಚರ್ಚೆ ನಡೆಸಲಾಗುತ್ತಿದೆ. ಈವರೆಗೂ ನೂರಕ್ಕೂ ಹೆಚ್ಚು ಸಭೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.
eesanje/url_46_338_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಗಾಂಧೀಜಿ, ಶಾಸ್ತ್ರಿರವರ ಮೌಲ್ಯಗಳು ನಮಗೆ ದಾರಿದೀಪ : ಸಿಎಂ
2
+ ಬೆಂಗಳೂರು,ಅ.2- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಬದುಕು ಹಾಗೂ ಮೌಲ್ಯಗಳು ನಮಗೆ ದಾರಿದೀಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಾತ್ಮ ಗಾಂಧೀಜಿ ಯವರ 154 ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 119 ನೇ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
3
+ ದೇಶಾದ್ಯಂತ ಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹಾತ್ಮ ಗಾಂಧೀಜಿ ಯವರಿಗೆ ನಾವು ನಮನ ಸಲ್ಲಿಸಿದ್ದೇವೆ. ಅವರ ಹೋರಾಟದ ಬದುಕು ನಮ್ಮೆಲ್ಲರಿಗೂ ಸ್ಪೋರ್ತಿಯಾಗಲಿ ಎಂದು ಹಾರೈಸಿದರು.
4
+ ಕೇವಲ 14 ನಿಮಿಷದಲ್ಲೇ ಸ್ವಚ್ಛವಾಗುತ್ತೆ ವಂದೇ ಭಾರತ್ ರೈಲು
5
+ ಲಾಲ್ ಬಹದ್ದೂರ್ ಶಾಸ್ತ್ರಿಯವರು ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ. ಜೀವನದ್ದುದ್ದಕ್ಕೂ ಪ್ರಾಮಾಣಿಕವಾಗಿ ಬದುಕಿದವರು. ಅವರು ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಮೌಲ್ಯ ನಮ್ಮೆಲ್ಲರಿಗೂ ದಾರಿದೀಪ. ಗಾಂಧೀಜಿ ಯವರು ಸರಳ ಜೀವನ ನಡೆಸಿದವರು. ಅಹಿಂಸಾ ಮಾರ್ಗ ಅನುಸರಿಸಿ, ಅಹಿಂಸಾತ್ಮಕ ಹೋರಾಟದಿಂದಲೇ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಸಮಾಜದ ಅತ್ಯಂತ ಕಟ್ಟಕಡೆಯ ವ್ಯಕ್ತಿಯಂತೆ ಸರಳವಾಗಿ ಬದುಕಲು ಪ್ರಯತ್ನಿಸಿದರು ಎಂದರು.
6
+ ಮೂರನೇ ದರ್ಜೆ ಬೋಗಿಯಲ್ಲಿ ಯಾವಾಗಲೂ ಪ್ರಯಾಣಿಸುತ್ತಿದ್ದರು. ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ, 3 ನೇ ದರ್ಜೆಗಿಂತಲೂ ಕೆಳ ದರ್ಜೆಯ ಬೋಗಿ ಇಲ್ಲವಾದ್ದರಿಂದ ನಾನು 3 ನೇ ದರ್ಜೆಯಲ್ಲಿ ಪ್ರಯಾಣಿಸುತ್ತಿದ್ದೇನೆ ಎಂದು ಉತ್ತರಿಸಿದರು. ಅಷ್ಟರ ಮಟ್ಟಿಗೆ ಸರಳವಾಗಿ ಬದುಕಿದ ಅವರು ತಮ್ಮ ಜೀವನದುದ್ದಕ್ಕೂ ಸತ್ಯ, ಅಹಿಂಸೆಯನ್ನು ಅಳವಡಿಸಿಕೊಂಡವರು ಎಂದು ಹೇಳಿದರು.
7
+ ದಕ್ಷಿಣ ಆಫ್ರಿಕಾದಲ್ಲಿದ್ದಾಗಲೂ ಸೆರೆಮನೆ ವಾಸ ಅನುಭವಿಸಿದ್ದರು. ಭಾರತದಲ್ಲಿಯೂ ಸೆರೆಮನೆಯ ವಾಸ ಅನುಭವಿಸಿ ದೇಶಕ್ಕೆ ಮಾದರಿಯಾಗಿದ್ದರು. ಅವರ ನೇತೃತ್ವದಲ್ಲಿ ಅನೇಕ ಜನರು ತ್ಯಾಗ, ಬಲಿದಾನಗಳನ್ನು ಅರ್ಪಿಸಿದರು. ಅಂತಿಮವಾಗಿ ಮತಾಂಧ ನಾಥೂರಾಮ್ ಗೋಡ್ಸೆ ಗುಂಡಿಗೆ ಬಲಿಯಾದರು ಎಂದು ಸ್ಮರಿಸಿದರು.
8
+ ವಿಶ್ವನಾಯಕ ಗಾಂಧಿ :ಸಮಾಜದಲ್ಲಿ ಎಲ್ಲ ಜನರೂ ಶಾಂತಿ, ನೆಮ್ಮದಿಯಿಂದ ಇರಬೇಕು. ಜಾತಿ, ಧರ್ಮ ಎಂದು ಹೊಡೆದಾಡಬಾರದು. ದೇಶ ಇಬ್ಭಾಗವಾಗಬಾರದು ಎಂದು ಹೋರಾಡಿದರು. ಜವಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ನಂತರ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಕಲ್ಕತ್ತಾದಲ್ಲಿ ಸತ್ಯಾಗ್ರಹ ಮಾಡುತ್ತಿದ್ದರು. ಅಷ್ಟು ಹೊತ್ತಿಗೆ ದೇಶ ವಿಭಜನೆಯಾಗಿ ಜನರ ಸಂಘರ್ಷದಿಂದ ಬೆಂಕಿ ಹೊತ್ತಿಕೊಂಡಿತ್ತು. ಅದನ್ನು ಬಗೆಹರಿಸಲು ಸತ್ಯಾಗ್ರಹ ಮಾಡಿದರು. ಜಗತ್ತ��ನ 148 ದೇಶಗಳಲ್ಲಿ ಅವರ ಪ್ರತಿಮೆಗಳಿವೆ.
9
+ ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಕಸನು ಈಡೇರುವುದಿಲ್ಲ : ಎಚ್‍ಡಿಡಿ ವಾಗ್ದಾಳಿ
10
+ ಅವರು ಕೇವಲ ಭಾರತದ ನಾಯಕರಾಗಿರಲಿಲ್ಲ. ಜಗತ್ತಿನಲ್ಲಿಯೇ ಗೌರವಕ್ಕೆ ಪ್ರಾತ್ರರಾದ ವಿಶ್ವನಾಯಕರು. ಅಂಥವರ ಜನ್ಮದಿನವನ್ನು ಆಚರಣೆ ಮಾಡುತ್ತಿದ್ದೇವೆ. ಅವರ ಹೋರಾಟ, ಸತ್ಯ, ಧರ್ಮನಿಷ್ಠೆ ಎಲ್ಲವೂ ನಮಗೆ ದಾರಿದೀಪವಾಗಲಿ ಹಾಗೂ ಸೂರ್ತಿ ನೀಡಲಿ ಎಂದರು. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
eesanje/url_46_338_5.txt ADDED
@@ -0,0 +1,7 @@
 
 
 
 
 
 
 
 
1
+ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ : ಬೊಮ್ಮಾಯಿ
2
+ ಬೆಂಗಳೂರು,ಅ.2- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಈಗ ಪ್ರಕ್ಷುಬ್ಧ ವಾತಾವರಣವಿರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಇಂಥ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
3
+ ಶಿವಮೊಗ್ಗದ ಮೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂಥ ಘಟನೆಗಳು ನಡೆಯುತ್ತದೆ. ಇಂತಹ ಸ್ಟೇಷನ್‍ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿಯನ್ನು ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ. ಇದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ. ಇದರ ಮೂಲ ಪ್ರತಿ ಡಿಸ್ಟಿಕ್‍ನಲ್ಲಿ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ ಎಂದರು.
4
+ ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಕಸನು ಈಡೇರುವುದಿಲ್ಲ : ಎಚ್‍ಡಿಡಿ ವಾಗ್ದಾಳಿ
5
+ ಇದನ್ನು ಸಮಗ್ರವಾಗಿ ನಿಭಾಯಿಸಬೇಕು, ಶಾಂತಿ ಕಾಪಾಡಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು, ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು ಎಂದು ಹೇಳಿದರು.
6
+ ಮಾತಲ್ಲಿ ಮಾತ್ರ ಗಾಂಧಿ: ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸು ಅಂತ ಸರ್ಕಾರ ಜಾಹೀರಾತು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಇವರು ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದು ಎಂದರು.
7
+ ಸಿಕ್ಕಲ್ಲೆಲ್ಲಾ ಮದ್ಯದಂಗಡಿ ಶುರು ಮಾಡಿದ್ದಾರೆ. ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರಯುತ್ತಿದ್ದಾರೆ. ಹೇಳಲು ಮಾತ್ರ ಗಾಂಧಿ ಶಾಂತಿ ಮಂತ್ರ ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳೇ ಎಂದು ಹೇಳಿದರು.
eesanje/url_46_338_6.txt ADDED
@@ -0,0 +1,6 @@
 
 
 
 
 
 
 
1
+ ಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್
2
+ ಬೆಂಗಳೂರು,ಅ.2- ಶಿವಮೊಗ್ಗ ಸೂಕ್ಷ್ಮ ಪ್ರದೇಶವಾಗಿದ್ದು ಅಲ್ಲಿ ಗಲಭೆ ನಡೆಯುವ ಮುನ್ಸೂಚನೆ ಇದ್ದ ಹಿನ್ನೆಲೆಯಲ್ಲಿ ಬಿಗಿ ಬಂದೊಬಸ್ತ್ ಮಾಡಲಾಗಿತ್ತು. ಹೀಗಾಗಿ ದೊಡ್ಡ ಪ್ರಮಾಣದ ಅನಾಹುತ ತಪ್ಪಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
3
+ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿರುವ ಅಹಿತಕರ ಘಟನೆಯನ್ನು ಪೊಲೀಸರು ನಿಯಂತ್ರಿಸಿದ್ದಾರೆ. ಎರಡು ಗುಂಪುಗಳಿಂದಲೂ ತಲಾ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು.
4
+ ಘಟನೆಯ ಬಗ್ಗೆ ಹೆಚ್ಚಿನ ವಿವರಗಳಿವೆ. ಬಂಧನದ ಬಗ್ಗೆಯೂ ಮಾಹಿತಿ ಇದೆ. ಆದರೆ ಅದನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಈ ರೀತಿ ಹಂಚಿಕೊಳ್ಳಲು ಕಾನೂನಾತ್ಮಕವಾಗಿ ಅವಕಾಶವಿಲ್ಲ ಎಂದರು.
5
+ ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಕಸನು ಈಡೇರುವುದಿಲ್ಲ : ಎಚ್‍ಡಿಡಿ ವಾಗ್ದಾಳಿ
6
+ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಮರ್ಥರಿದ್ದಾರೆ. ಇದು ಹೊಸದೇನಲ್ಲ. ಶಿವಮೊಗ್ಗದಲ್ಲಿ ಮೊದಲಿನಿಂದಲೂ ಈ ರೀತಿಯ ಘಟನೆಗಳು ನಡೆಯುತ್ತಲೇ ಇವೆ. ಈದ್‍ಮಿಲಾದ್ ಮೆರವಣಿಗೆ ನಡೆಯುವ ವೇಳೆ ಏನು ಬೇಕಾದರೂ ನಡೆಯಬಹುದು ಎಂಬ ಮುನ್ಸೂಚನೆ ಮೊದಲೇ ಇತ್ತು. ಹೀಗಾಗಿ ಅಗತ್ಯವಾದ ಪೊಲೀಸ್ ಬಂದೊಬಸ್ತ್ ಏರ್ಪಡಿಸಿದ್ದೆವು. ನಂತರ ಗಲಾಟೆಯನ್ನು ನಿಯಂತ್ರಿಸಲಾಗಿದೆ. ತನಿಖೆ ಮುಂದುವರೆದಿದೆ ಎಂದು ಹೇಳಿದರು.
eesanje/url_46_338_7.txt ADDED
@@ -0,0 +1,5 @@
 
 
 
 
 
 
1
+ ಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ 43 ಮಂದಿ ಬಂಧನ : ಸಿಎಂ
2
+ ಬೆಂಗಳೂರು,ಅ.2- ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿರುವ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 43 ಮಂದಿಯನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ತಹಬದಿಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್‍ಮಿಲಾದ್ ಮೆರವಣಿಗೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ. ಈ ಪ್ರದೇಶ ಶಿವಮೊಗ್ಗದ ಹೊರವಲಯದಲ್ಲಿದೆ.
3
+ ಪೊಲೀಸರ ಮೇಲೂ ಕಲ್ಲುತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ ನಡೆಸಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ 43 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವುದು ಕಾನೂನು ಬಾಹಿರವಾದ ಕೃತ್ಯ. ಇಂತಹುದನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ.
4
+ ಪೊಲೀಸ್ ಸಿಬ್ಬಂದಿಗಳಿಂದಲೇ ಯುವತಿಗೆ ಲೈಂಗಿಕ ಕಿರುಕುಳ
5
+ ಸದ್ಯಕ್ಕೆ ಶಿವಮೊಗ್ಗದ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹೆಚ್ಚಿನ ಬಿಗಿ ಭದ್ರತೆ ಒದಗಿಸಿದ್ದಾರೆ ಎಂದು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
eesanje/url_46_338_8.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಬೂದಿ ಮುಚ್ಚಿದ ಕೆಂಡವಾದ ಶಿವಮೊಗ್ಗ
2
+ ಶಿವಮೊಗ್ಗ, ಅ.2- ನಗರದ ಹೊರವಲಯದ ರಾಗಿಗುಡ್ಡದಲ್ಲಿ ಈದ್‍ಮಿಲಾದ್ ಮೆರವಣಿಗೆಯ ವೇಳೆ ಕಲ್ಲು ತೂರಾಟ, ಲಾಠಿ ಚಾರ್ಜ್ ನಡೆದಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ನಿನ್ನೆ ಈದ್‍ಮಿಲಾದ್ ಪ್ರಯುಕ್ತವಾಗಿ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಅಳವಡಿಸಲಾಗಿದ್ದ ಕಟೌಟ್ ಕುರಿತಂತೆ ಅಸಮಾಧಾನಗೊಂಡಿದ್ದ ಕೆಲವರು ಆಯೋಜಕರ ಜೊತೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ.
3
+ ಕೆಲವು ಕಿಡಿಗೇಡಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಂತರ ಉಭಯ ಗುಂಪುಗಳ ನಡುವೆ ಕಲ್ಲು ತೂರಾಟ ಹೆಚ್ಚಾಗಿದ್ದು, 7 ಕ್ಕೂ ಹೆಚ್ಚು ಕಾರುಗಳು, ಹಲವು ಮನೆಗಳ ಕಿಟಕಿ ಗಾಜುಗಳು ಜಖಂಗೊಂಡಿವೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳು ಕೆಲವರ ಮನೆಗಳಿಗೆ ನುಗ್ಗಿ ದಾಳಿ ಮಾಡುವ ಪ್ರಯತ್ನ ನಡೆಸಿದ್ದಾರೆ.
4
+ ಪೊಲೀಸರು ಮಧ್ಯಪ್ರವೇಶ ಮಾಡಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಿನ್ನೆ ಮೆರವಣಿಗೆಯ ಸಂದರ್ಭದಲ್ಲಿ ಜಿಲ್ಲಾ ಎಸ್ಪಿ ಮಿಥುನ್‍ಕುಮಾರ್‍ರವರು ಇದ್ದರು. ರಾಗಿಗುಡ್ಡದಲ್ಲಿ ಗಲಭೆ ನಡೆಯುತ್ತಿದ್ದ ಮಾಹಿತಿ ತಿಳಿದು ಸ್ಥಳಕ್ಕೆ ನಾಲ್ಕು ಮಂದಿ ಸಿಬ್ಬಂದಿಗಳೊಂದಿಗೆ ಖುದ್ದು ಭೇಟಿ ನೀಡಿದ ಎಸ್‍ಪಿ ಅವರ ಮೇಲೂ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಈ ವೇಳೆ ನಡೆದ ಗುಂಪು ಸಂಘರ್ಷದಲ್ಲಿ ಎಸ್‍ಪಿಯವರ ಗನ್‍ಮ್ಯಾನ್ ಸಿಲುಕಿಕೊಂಡಿದ್ದರು.
5
+ ಪೊಲೀಸ್ ಸಿಬ್ಬಂದಿಗಳಿಂದಲೇ ಯುವತಿಗೆ ಲೈಂಗಿಕ ಕಿರುಕುಳ
6
+ ಪೊಲೀಸರ ಮೇಲೂ ಭಾರೀ ಗಾತ್ರದ ಕಲ್ಲುತೂರಾಟ ನಡೆಸಲಾಗಿದೆ. ಮನೆಗಳ ಮೇಲೂ ಬೃಹತ್ ಗಾತ್ರದ ಕಲ್ಲುಗಳು ಬಿದ್ದಿವೆ. ಸ್ಥಳದಿಂದ ತಪ್ಪಿಸಿಕೊಂಡ ಇಬ್ಬರು ಹುಡುಗರು 200 ಮೀಟರ್ ದೂರದಲ್ಲಿ ಮನೆಯೊಂದರ ಮುಂದೆ ಕುಳಿತಿದ್ದರು. ಅವರನ್ನು ಬೆನ್ನಟ್ಟಿ ಬಂದ ಗುಂಪೊಂದು ಎಳೆದುಕೊಂಡು ಹೋಗುವಾಗ ತಳ್ಳಾಟ, ನೂಕಾಟ ನಡೆದಿದೆ. ಸಂಘರ್ಷದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಅದರಲ್ಲಿ 5 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
7
+ ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ 50 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ. ಹೆಚ್ಚಿನ ಪೊಲೀಸ್ ಬಂದೊಬಸ್ತ್ ಆಯೋಜಿಸಲಾಗಿದೆ.
8
+ ಆರ್‍ಎಎಫ್, ಕೆಎಸ್‍ಆರ್‍ಪಿ, ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಲಾಗಿದೆ. ಅದರಲ್ಲೂ ರಾಗಿಗುಡ್ಡ ಪ್ರದೇಶವನ್ನೊಳಗೊಂಡ ಶಾಂತಿನಗರಕ್ಕೆ ಸಂಚರಿಸುವ ಪ್ರತಿ ವಾಹನವನ್ನು ಪರಿಶೀಲನೆ ನಡೆಸಲಾಗುತ್ತಿದೆ. ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮತ್ತು ಹೊರಗಿನವರು ಎಂದು ಭಾವಿಸಲಾದ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
9
+ ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟುಗಳು ಮುಚ್ಚಿರುವುದರಿಂದ ಪ್ರದೇಶದಲ್ಲಿ ಅಘೋಷಿತ ಬಂದ್‍ನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಗಲಾಟೆಯ ಬಳಿಕ ಸ್ಥಳೀಯ ಮಹಿಳೆಯರು ಆತಂಕ ವ್ಯಕ್ತಪಡಿಸಿ ತೋಡಿಕೊಂಡ ಅಳಲಿನ ಧ್ವನಿಗಳು ವ್ಯಾಪಕ ವೈರಲ್ ಆಗಿವೆ. ಆಕ್ಷೇಪಾರ್ಹ ಕಟೌಟ್‍ನ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ಕೋಲಾರದಲ್ಲಿ ಇದೇ ರೀತಿಯ ಕಟೌಟ್ ಕಂಡುಬಂದಿತ್ತು.
10
+ ಶಿವಮೊಗ್ಗದಲ್ಲಿ ಶಾಂತಿಯುತವಾಗಿ ಆಚರಣೆಯಾಗಬೇಕಾಗಿದ್ದ ಈದ್‍ಮಿಲಾದ್ ಹಬ್ಬದ ವೇಳೆ ಅಹಿತಕರ ಘಟನೆಗಳು ನಡೆಯುವ ಮೂಲಕ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಎಸ್ಪಿ ಮಿಥುನ್‍ಕುಮಾರ್ ಅವರು ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಮೆರವಣಿಗೆ ವೇಳೆ ದಾಂಧಲೆ ಮಾಡಲು ಕೆಲವರು ತಯಾರಿ ಮಾಡಿಕೊಂಡಿದ್ದರು. ಅದನ್ನು ನಿಯಂತ್ರಿಸಲು ನಾವು ಬಲಪ್ರಯೋಗ ಮಾಡಬೇಕಾಯಿತು. ತಕ್ಷಣವೇ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದೇವೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರು ಮತ್ತು ಆಸ್ತಿ ನಷ್ಟಕ್ಕೊಳಗಾದವರು ದೂರು ನೀಡಲು ಸೂಚಿಸಿದ್ದೇವೆ.
11
+ ಜಾಗತಿಕ ಅಧಿಕಾರ ಹಂಚಿಕೆ ರಚನೆಯಲ್ಲಿ ಹಿಂದೂಗಳು ಪ್ರಮುಖ ಪಾತ್ರ ನಿರ್ವಹಿಸಲು ಕರೆ
12
+ ಘಟನೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಡ್ರೋನ್ ಮೂಲಕವೂ ಚಿತ್ರೀಕರಿಸಿರುವುದರಿಂದ ಆರೋಪಿಗಳನ್ನು ಗುರುತಿಸಿ ಬಂಧಿಸಲಾಗುತ್ತಿದೆ. ಎಷ್ಟು ಜನರನ್ನು ಬಂಧಿಸಲಾಗಿದೆ ಎಂಬ ಬಗ್ಗೆ ನಂತರ ವಿವರಣೆ ನೀಡಲಾಗುವುದಾಗಿ ಎಸ್ಪಿಯವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
13
+ ಸ್ಥಳೀಯ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂತಹ ಘಟನೆಗಳಲ್ಲಿ ಶಾಂತಿ ಬಯಸುವವರು ಮುಕ್ತ ಮನಸ್ಸಿನಿಂದ ಯೋಚಿಸಬೇಕು. ಯಾವುದೇ ವಿಕೃತಗಳಿಗೆ ಅವಕಾಶ ನೀಡಬಾರದು. ಹೊರಗಿನಿಂದ ಬಂದವರು ಈ ರೀತಿಯ ಕೃತ್ಯಗಳನ್ನು ಮಾಡುತ್ತಾರೆಂದು ಹೇಳಲಾಗುತ್ತಿದೆ.
14
+ ಅವರಿಗೆ ಸ್ಥಳೀಯರು ಸಹಕಾರ ನೀಡುತ್ತಿರುವುದು ರಹಸ್ಯವೇನಲ್ಲ, ಹೊರಗಿನಿಂದ ಬಂದವರು ಎಂಥವರು, ಯಾವ ಉದ್ದೇಶಕ್ಕೆ ಬರುತ್ತಿದ್ದಾರೆಂದು ಅರಿತುಕೊಂಡು ಎಚ್ಚೆತ್ತುಕೊಳ್ಳದಿದ್ದರೆ ಶಾಂತಿಪಾಲನೆ ಕಷ್ಟಸಾಧ್ಯವಾಗುತ್ತದೆ. ಈ ಬಗ್ಗೆ ಸಮುದಾಯ ಸ್ವಯಂ ಕಾಳಜಿ ವಹಿಸಬೇಕೆಂದು ಕರೆ ನೀಡಿದ್ದಾರೆ.
eesanje/url_46_338_9.txt ADDED
@@ -0,0 +1,9 @@
 
 
 
 
 
 
 
 
 
 
1
+ ಕೇವಲ 14 ನಿಮಿಷದಲ್ಲೇ ಸ್ವಚ್ಛವಾಗುತ್ತೆ ವಂದೇ ಭಾರತ್ ರೈಲು
2
+ ಮೈಸೂರು,ಅ.2- ರೈಲ್ವೆ ಸಚಿವಾಲಯದ ನಿರ್ದೇಶನದಂತೆ ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಚೆನ್ನೈ-ಮೈಸೂರು – ಚೆನ್ನೈ ವಂದೇ ಭಾರತ್ ರೈಲಿಗೆ 14 ನಿಮಿಷಗಳ ಶುಚಿಗೊಳಿಸುವ ಹೊಸ ಪ್ರಕ್ರಿಯೆಯನ್ನು ಪರಿಚಯಿಸಿದೆ. ಅಂದರೆ ಇದುವರೆಗೆ ವಂದೇ ಭಾರತ್ ರೈಲಿನ 16 ಕೋಚ್ ಗಳನ್ನು ಸ್ವಚ್ಛಗೊಳಿಸಲು ಸುಮಾರು 45 ನಿಮಿಷಗಳು ಬೇಕಾಗುತ್ತಿತ್ತು.ಈಗ ಈ 14 ನಿಮಿಷಗಳ ಪ್ರಕ್ರಿಯೆಯಿಂದ ಅತಿ ವೇಗವಾಗಿ ರೈಲನ್ನು ಸಚ್ಛಗೊಳಿಸಿ ಹೊರಡಲು ಅಣಿಗೊಳಿಸಬಹುದಾಗಿದೆ.
3
+ 14 ನಿಮಿಷಗಳ ಪವಾಡ ಕಾರ್ಯಕ್ರಮವನ್ನು ವಂದೇ ಭಾರತ್ ರೈಲುಗಳು ವಿವಿಧ ಗಮ್ಯ ಸ್ಥಾನಗಳಿಗೆ ಆಗಮಿಸಿದ ನಂತರ ಅವುಗಳನ್ನು ಶುಚಿಗೊಳಿಸುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಿಖರವಾಗಿ ವಿನ್ಯಾಸಗೊಳಿಸಲಾಗಿದೆ. ಭಾರತೀಯ ರೈಲ್ವೆ ಅಭಿವೃದ್ಧಿಪಡಿಸಿರುವ ಈ ವಿಧಾನದಿಂದ ಕೇವಲ 14 ನಿಮಿಷಗಳಲ್ಲಿ ಸಂಪೂರ್ಣವಾಗಿ ಸಮಗ್ರವಾಗಿ ಶುಚಿಗೊಳಿಸುವಿಕೆಯನ್ನು ಪೂರ್ಣ ಗೊಳಿಸಲು ದಾಧ್ಯವಾಗಿದೆ.
4
+ ಪೊಲೀಸ್ ಸಿಬ್ಬಂದಿಗಳಿಂದಲೇ ಯುವತಿಗೆ ಲೈಂಗಿಕ ಕಿರುಕುಳ
5
+ ಒಟ್ಟು 48 ಸಿಬ್ಬಂದಿ ಮತ್ತು 3 ಮೇಲ್ವಿಚಾರಕರು, ಪ್ರತಿಯೊಂದು ಬೋಗಿಗೂ ತರಬೇತಿ ಪಡೆದ 3 ಸಿಬ್ಬಂದಿ ಸದಸ್ಯರನ್ನು ನಿಯೋಜಿಸಲಾಗುತ್ತದೆ. ಮೊದಲನೆ ಸಿಬ್ಬಂದಿ ಕಸವನ್ನು ಸಂಗ್ರಹಿಸುತ್ತಾರೆ, ಒಣ ಒರಸುವಿಕೆಯನ್ನು ನಿರ್ವಹಿಸುತ್ತಾರೆ ಮತ್ತು ಹೊರಗಿನ ಕಿಟಕಿ ಗಾಜನ್ನು ಸ್ವಚ್ಛಗೊಳಿಸುತ್ತಾರೆ.
6
+ ಎರಡನೆಯ ಸಿಬ್ಬಂದಿ ಉಪಹಾರ ಮೇಜು ಮತ್ತು ಆಸನಗಳನ್ನು ಶುಚಿಗೊಳಿಸುತ್ತಾರೆ ಮತ್ತು ನೀರಿನಿಂದ ಒರೆಸುತ್ತಾರೆ. ಮೂರನೆಯ ಸಿಬ್ಬಂದಿ ಕಸದಬುಟ್ಟಿಗಳನ್ನು ಶೌಚಾಲಯಗಳನ್ನು ಕನ್ನಡಿಗಳನ್ನು ದ್ವಾರದ ಪ್ರದೇಶಗಳನ್ನು ಸ್ವಚ್ಛಗೊಳಿಸುತ್ತಾರೆ ಮತ್ತು ಈ ಪ್ರದೇಶಗಳನ್ನು ಸೂಕ್ಷ್ಮವಾಗಿ ಒರೆಸುತ್ತಾರೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ರವರು ಈ ಕೆಲಸದಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗಳ ಕಾರ್ಯವನನ್ನು ಮೆಚ್ಚಿದರು.
7
+ 14 ನಿಮಿಷಗಳ ಪವಾಡ ಕಾರ್ಯಕ್ರಮವು ವಂದೇ ಭಾರತ್ ರೈಲುಗಳಲ್ಲಿ ಶುಚಿಗೊಳಿಸುವ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸಲು ಮತ್ತು ನಿಖರವಾಗಿ ಹೊಂದಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು. ಈ ಪ್ರಕ್ರಿಯೆಯು ಹೆಚ್ಚು ಪರಿಣಾಮಕಾರಿಯಾಗಿದ್ದೂ ನಿಖರವಾದ ಸಮಯದ ಚೌಕಟ್ಟಿನೊಳಗೆ ರೈಲು ಹಿಂದಿರುಗಿ ಹೊರಡಲು ಸಿದ್ಧಮಾಡುತ್ತದೆ ಎಂದು ತಿಳಿಸಿದರು.
8
+ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಉಗ್ರ ಅರೆಸ್ಟ್
9
+ ಭಾನುವಾರ ಮುಂಜಾನೆ, ಮೈಸೂರು ರೈಲು ನಿಲ್ದಾಣದಲ್ಲಿ ಏಕ್ ತಾರೀಖ್ ಏಕ್ ಘಂಟಾ ಏಕ್ ಸಾಥ್ ಎಂಬ ಶೀರ್ಷಿಕೆಯಡಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ರವರು, ಇತರ ಹಿರಿಯ ಅಧಿಕಾರಿಗಳು, ವಿಭಾಗದ ಸಿಬ್ಬಂದಿ ಮತ್ತು ಬ್ರಹ್ಮಕುಮಾರಿ ಮತ್ತು ಇತರ ಸಂಸ್ಥೆಗಳ ಸ್ವಯಂಸೇವಕರ ಜೊತೆ ಈ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿದೆ.
eesanje/url_46_339_1.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
2
+ ಬೆಂಗಳೂರು, ಅ.1- ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೃದ್ಧಾಪ್ಯ ವೇತನವನ್ನು ಹೆಚ್ಚಿಸಿ ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಹಿಳೆಯರ ಮಕ್ಕಳ ಹಾಗೂ ಹಿರಿಯ ಹಿರಿಯ ನಾಗರಿಕರ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದರು.
3
+ ಮುಂದಿನ ವರ್ಷದ ಫೆಬ್ರವರಿಯಲ್ಲಿ ತಾವು ಬಜೆಟ್ ಮಂಡಿಸುತ್ತಿದ್ದು, ಆ ವೇಳೆ ಮಾಸಿಕವಾಗಿ ನೀಡಲಾಗುತ್ತಿರುವ 1,200 ರೂ.ಗಳ ವೃದ್ಧಾಪ್ಯ ವೇತನವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಆದರೆ ಎಷ್ಟು ಹೆಚ್ಚಿಸಲಾಗುತ್ತದೆ ಎಂದು ಈಗಲೇ ಸ್ಪಷ್ಟಪಡಿಸುವುದಿಲ್ಲ ಎಂದರು.
4
+ ಹಿರಿಯರ ಚೈತನ್ಯ, ಮಾರ್ಗದರ್ಶನಗಳು ಸಮಾಜಕ್ಕೆ ಅಗತ್ಯವಾಗಿವೆ. ಇಂದಿನ ಕಾರ್ಯಕ್ರಮದಲ್ಲಿ ಸನ್ಮಾನಿತರಾದವರು ಸಮಾಜಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಸೂರ್ತಿದಾಯಕ ಕೆಲಸ ಮಾಡಿದ್ದಾರೆ. ಅವರನ್ನು ಗೌರವಿಸುವುದು ನಮ್ಮನ್ನು ನಾವೇ ಗೌರವಿಸಿಕೊಂಡಂತೆ. ಭವಿಷ್ಯದಲ್ಲೂ ಹೆಚ್ಚಿನ ಆರೋಗ್ಯ, ಆಯುಷ್ಯದೊಂದಿಗೆ ಹಿರಿಯರು ಜೀವಿಸಲಿ ಎಂದು ಹಾರೈಸಿದರು.
5
+ ಗೋದಾಮಿನಲ್ಲಿ ಬೆಂಕಿ : ಅಪಾರ ಪ್ರಮಾಣದ ಸುಗಂಧದ್ರವ್ಯಗಳು ನಾಶ
6
+ ಹಣ್ಣಿನ ವ್ಯಾಪಾರ ಮಾಡಿ ಬಂದ ಎಲ್ಲಾ ದುಡ್ಡನ್ನು ಶೈಕ್ಷಣಿಕ ಅಭಿವೃದ್ಧಿಗಾಗಿ ಖರ್ಚು ಮಾಡಿದ ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಪ್ಪ ಅವರಿಂದ ಸಮಾಜಕ್ಕೆ ಇನ್ನಷ್ಟು ಸೇವೆ ಸಂದಾಯವಾಗಲಿ ಎಂದು ಹೇಳಿದರು. ಪ್ರತಿಯೊಂದು ಮಗುವೂ ವಿಶ್ವಮಾನವನಾಗಿಯೇ ಭೂಮಿಗೆ ಬರುತ್ತದೆ. ಆದರೆ ಸಾಯುವಾಗ ಸಮಾಜದಿಂದ ಪ್ರಭಾವಿತವಾಗಿ ಬದಲಾವಣೆ ಕಾಣುವುದು ನೋವಿನ ಸಂಗತಿ. ಇಂತಹುದೇ ಧರ್ಮದಲ್ಲಿ ಹುಟ್ಟಬೇಕು ಎಂದು ನಾವ್ಯಾರು ಬಯಸುವುದಿಲ್ಲ. ಧರ್ಮ, ಜಾತಿ ಇರುವುದಕ್ಕಾಗಿ ಅದರಲ್ಲಿ ಹುಟ್ಟುತ್ತೇವೆ, ಅಲ್ಲಿನ ಪದ್ಧತಿಗಳನ್ನು ಆಚರಣೆ ಮಾಡುತ್ತೇವೆ. ನಮ್ಮ ಧರ್ಮಗಳನ್ನು ಪ್ರೀತಿಸುವುದು ಒಳ್ಳೆಯದು. ಹಾಗೆಯೇ ಮತ್ತೊಂದು ಧರ್ಮವನ್ನೂ ಗೌರವಿಸಬೇಕು. ಸಹಿಷ್ಣುತೆ, ಸಾಮರಸ್ಯದಲ್ಲಿ ಬದುಕಿದಾಗ ಮಾತ್ರ ಜೀವನ ಸಾರ್ಥಕ ಎಂದು ಹೇಳಿದರು.
7
+ ಹಿರಿಯ ನಾಗರಿಕ ಕಲ್ಯಾಣ ಇಲಾಖೆಯಿಂದ ಸಾಂಸ್ಕøತಿಕ ಚಟುವಟಿಕೆ ಹಾಗೂ ಹಿರಿಯರ ಸಕ್ರಿಯತೆಗೆ ಹಲವು ಚಟುವಟಿಕೆಗಳನ್ನು ಆಯೋಜನೆಗೊಂಡಿರುವುದು ಸ್ವಾಗತಾರ್ಹ. ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಿಸಲು ಮತ್ತು ಅಲ್ಲಿನ ಪರಿಸ್ಥಿತಿ ಸುಧಾರಿಸುವಲ್ಲಿ ನಮ್ಮ ಸರ್ಕಾರ ಆದ್ಯತೆ ನೀಡಲಿದೆ ಎಂದು ಹೇಳಿದರು.
8
+ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ರಾಜ್ಯದಲ್ಲಿ 59 ಲಕ್ಷ ಹಿರಿಯ ನಾಗರಿಕರಿದ್ದಾರೆ. ಅವರಲ್ಲಿ 49 ಲಕ್ಷ ಮಂದಿಗೆ ಮಾಸಿಕ 1,200 ರೂ. ವೃದ್ಧಾಪ್ಯ ವೇತನ ನೀಡುತ್ತಿದ್ದೇವೆ. ಪ್ರಸ್ತುತ ದಿನಮಾನದಲ್ಲಿ ಮಹಿಳಾ ಸಬಲೀಕರಣ ಸೇರಿದಂತೆ ಪಂಚಖಾತ್ರಿ ಯೋಜನೆಗಳ ಮೂಲಕ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಮುಖ್ಯಮಂತ್ರಿಯವರು ಹಿರಿಯ ನಾಗರಿಕರಿಗೆ ಮಾಸಾಶನವನ್ನು 2,000 ರೂ.ಗಳಿಗೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
9
+ ಸಾಂಸ್ಕøತಿಕ, ಕ್ರೀಡೆ, ಆರೋಗ್ಯ, ಆರೈಕೆ ಸೇರಿದಂತೆ ಎಲ್ಲಾ ಚಟುವಟಿಕೆಗಳನ್ನೂ ಒಂದೇ ಸೂರಿನಡಿ ಕಲ್ಪಿಸಿ, ಜಿಲ್ಲೆಗೊಂದರಂತೆ ಹಿರಿಯರ ಕಲ್ಯಾಣ ಕೇಂದ್ರಗಳನ್ನು ಸ್ಥಾಪಿಸಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕೇಂದ್ರದಿಂದ ಶೇ. 60 ರಷ್ಟು, ರಾಜ್ಯಸರ್ಕಾರ ಶೇ.40 ರಷ್ಟು ಅನುದಾನ ಬಳಸಿಕೊಳ್ಳಲಾಗುವುದು. ವೃದ್ಧಾಶ್ರಮಗಳಲ್ಲಿ ಸಾಕಷ್ಟು ನ್ಯೂನತೆಗಳಿರುವುದನ್ನು ತಾವು ಗಮನಿಸಿದ್ದು, ಅವುಗಳನ್ನು ಸರಿಪಡಿಸಲು ಹಂತಹಂತವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
10
+ “ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ”
11
+ ಕಾರ್ಯಕ್ರಮಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ನಾಗರಿಕರ ಜೊತೆ ಸಮಾಲೋಚನೆ ನಡೆಸಿದರು. ಸಂಚಾರಿ ಆರೋಗ್ಯ ತಪಾಸಣಾ ಘಟಕದಲ್ಲಿ ತಮ್ಮ ರಕ್ತದೊತ್ತಡ ಹಾಗೂ ಇತರ ಪರೀಕ್ಷೆಗಳನ್ನು ಮಾಡಿಸಿಕೊಂಡರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲï, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಅವರನ್ನು ಸನ್ಮಾನಿಸಲಾಯಿತು.
eesanje/url_46_339_10.txt ADDED
@@ -0,0 +1,9 @@
 
 
 
 
 
 
 
 
 
 
1
+ ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-09-2023)
2
+ ನಿತ್ಯ ನೀತಿ :ಮಾನವ ಜೀವನ ಯಾತ್ರೆಗೆ ನಂದಾ ದೀವಿಗೆಯಾಗಿ ಬೆಳಕು ನೀಡಬಲ್ಲ ಸಾಮಥ್ರ್ಯವನ್ನು ಹೊಂದಿರುವುದೇ ಸನಾತನ ಧರ್ಮ.
3
+ ಪಂಚಾಂಗ : ಶನಿವಾರ, 30-09-2023ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷತಿಥಿ: ಪ್ರತಿಪದ್ / ನಕ್ಷತ್ರ: ರೇವತಿ / ಯೋಗ: ಧ್ರುವ / ಕರಣ: ತೈತಿಲ
4
+ ಸೂರ್ಯೋದಯ : ಬೆ.06.09ಸೂರ್ಯಾಸ್ತ : 06.11ರಾಹುಕಾಲ : 9.00-10.30ಯಮಗಂಡ ಕಾಲ : 1.30-3.00ಗುಳಿಕ ಕಾಲ : 6.00-7.30
5
+ ಇಂದಿನ ರಾಶಿಭವಿಷ್ಯ
6
+ ಮೇಷ: ದೂರ ಪ್ರಯಾಣದಿಂದ ತೊಂದರೆ. ಅನಗತ್ಯ ಸಮಸ್ಯೆಗಳು ಎದುರಾಗಬಹುದು.ವೃಷಭ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.ಮಿಥುನ: ಭೂಮಿ ವಿಚಾರದಲ್ಲಿ ನಷ್ಟ ಅನುಭವಿಸುವಿರಿ. ನಂಬಿಕಸ್ಥ ರಿಂದ ದ್ರೋಹವಾಗಲಿದೆ.
7
+ ಕಟಕ: ಆರೋಗ್ಯ ಕಾಪಾಡಿ ಕೊಳ್ಳಲು ವ್ಯಾಯಾಮ ಅಥವಾ ಯೋಗ ಮಾಡಿ. ಬಂಧುಗಳೊಂದಿಗೆ ಅನಗತ್ಯ ವಿವಾದ ಬೇಡ.ಸಿಂಹ: ಸಹೋದರರೊಂದಿಗೆ ಮನಸ್ತಾಪವಾಗಲಿದೆ. ಮನಸ್ಸಿನಲ್ಲಿ ಗೊಂದಲ.ಕನ್ಯಾ: ಹಳೆ ಸ್ನೇಹಿತರ ಜೊತೆ ಸಂವಾದ ನಡೆಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ. ಕುಲದೇವರನ್ನು ಪ್ರಾರ್ಥಿಸಿ.
8
+ ತುಲಾ: ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ತೋರಿಸುವರು. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಹೊಸ ಒಪ್ಪಂದಗಳಾಗಲಿವೆ.ವೃಶ್ಚಿಕ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ.ಧನುಸ್ಸು: ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮ ವಾಗಿರುತ್ತದೆ. ತಲೆ ಅಥವಾ ಬೆನ್ನುನೋವು ಕಾಡಲಿದೆ.
9
+ ಮಕರ: ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಎಚ್ಚರಿಕೆಯಿಂದಿರಬೇಕು.ಕುಂಭ: ಸ್ವಸಾಮಥ್ರ್ಯದಿಂದ ಪ್ರಗತಿ ಸಾಸುವಿರಿ. ಧಾರ್ಮಿಕ ಆಚರಣೆಗಳಿಂದ ತೃಪ್ತಿ ಸಿಗಲಿದೆ.ಮೀನ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
eesanje/url_46_339_11.txt ADDED
@@ -0,0 +1,7 @@
 
 
 
 
 
 
 
 
1
+ ಸಂಕಷ್ಟ ಸೂತ್ರ ರಚನೆಗೆ ಬಗ್ಗೆ ಚರ್ಚೆ : ಡಿಸಿಎಂ ಡಿಕೆಶಿ
2
+ ಬೆಂಗಳೂರು, ಸೆ.29- ಸಂಕಷ್ಟ ಸೂತ್ರ ರಚನೆಯ ಬಗ್ಗೆ ರಾಜ್ಯ ಸರ್ಕಾರ ತನ್ನ ಪಾಲಿನ ಸೂತ್ರಗಳನ್ನು ರೂಪಿಸಲು ಇಂದು ನಡೆಯುವ ಮಹತ್ವದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕಷ್ಟ ಸೂತ್ರವನ್ನು ಕೇಂದ್ರ ಸರ್ಕಾರ ರಚನೆ ಮಾಡಬೇಕಿದೆ. ಬೇರೆ ಪಕ್ಷದವರು ಹೇಳಿದಂತೆ ನಾನು ಮಾತನಾಡಲು ಸಾಧ್ಯವಿಲ್ಲ. ಸಚಿವನಾಗಿ ಜವಾಬ್ದಾರಿಯುತವಾಗಿ ಮಾತನಾಡಬೇಕಿದೆ. ಸಂಕಷ್ಟ ಸೂತ್ರಕ್ಕೆ ಮೊದಲು ನಮ್ಮ ಸಮಸ್ಯೆ ಬಗ್ಗೆ ಮಾರ್ಗಸೂಚಿ ಸಿದ್ದ ಪಡಿಸಿಕೊಳ್ಳ ಬೇಕಿದೆ. ಅದಕ್ಕಾಗಿ ಇಂದು ಮಹತ್ವದ ಸಭೆ ನಡೆಸಲಾಗುತ್ತಿದೆ ಎಂದರು.
4
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಿವೃತ್ತ ನ್ಯಾಯಾೀಶರು, ಮಾಜಿ ಅಡ್ವೋಕೆಟ್ ಜನರಲ್ಗಳು ಹಾಗೂ ಹಿರಿಯ ವಕೀಲರ ತಂಡದ ಜೊತೆ ಚರ್ಚೆ ನಡೆಸಲಾಗುತ್ತಿದೆ ಎಂದರು. ಇಂದು ಕಾವೇರಿ ನೀರು ನಿರ್ವಹಣಾ ಪ್ರಾಕಾರದ ಸಭೆ ನಡೆಯುತ್ತಿದೆ.
5
+ 15 ವರ್ಷ ಹಳೆಯ 5 ಸಾವಿರ ಸರ್ಕಾರಿ ವಾಹನಗಳನ್ನು ನಾಶಪಡಿಸಲು ಅನುಮತಿ
6
+ ಅಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯ ಆದೇಶವನ್ನು ಪ್ರಶ್ನೆ ಮಾಡಿದ್ದೇವೆ. ಸದ್ಯಕ್ಕೆ ಮಳೆಯಿಲ್ಲ. ಹಾಗಾಗಿ ಸಮಿತಿಯ ಆದೇಶದಂತೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಪ್ರತಿಪಾದಿಸಿದ್ದೇವೆ ಎಂದು ಹೇಳಿದರು.
7
+ ಕಾವೇರಿ ವಿಷಯದಲ್ಲಿ ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ. ಕೆಲ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದವು. ಆದರೆ ಸರ್ಕಾರ ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿದೆ. ಎಲ್ಲೆಡೆ ಸಂಚಾರ ಎಂದಿನಂತಿದೆ. ಅಂಗಡಿ, ವ್ಯಾಪಾರ ವಹಿವಾಟುಗಳು ಮುಂದುವರೆದಿದೆ. ಶಾಂತಿಯುತ ವಾತಾವರಣವನ್ನು ಜನ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
eesanje/url_46_339_12.txt ADDED
@@ -0,0 +1,8 @@
 
 
 
 
 
 
 
 
 
1
+ 15 ವರ್ಷ ಹಳೆಯ 5 ಸಾವಿರ ಸರ್ಕಾರಿ ವಾಹನಗಳನ್ನು ನಾಶಪಡಿಸಲು ಅನುಮತಿ
2
+ ಬೆಂಗಳೂರು, ಸೆ.29- ಹದಿನೈದು ವರ್ಷಗಳನ್ನು ಪೂರೈಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, ನಿಗಮ, ಮಂಡಳಿಗಳು, ಸ್ಥಳೀಯ ಸಂಸ್ಥೆಗಳಲ್ಲಿನ ಐದು ಸಾವಿರ ವಾಹನಗಳನ್ನು ನಾಶಪಡಿಸಲು ಸರ್ಕಾರ ಅನುಮೋದನೆ ನೀಡಿದೆ.
3
+ ರಾಜ್ಯದಲ್ಲಿನ ಹಳೆಯ ವಾಹನಗಳನ್ನು ನಾಶಪಡಿಸಲು ನೊಂದಾಯಿತ ವಾಹನಗಳ ಸ್ಕ್ರಾಪಿಂಗ್ ಪಾಲಿಸಿ 2022ರ ಅಡಿಯಲ್ಲಿ 15 ವರ್ಷ ಪೂರೈಸಿರುವ ಸರ್ಕಾರಿ ಸ್ವಾಮ್ಯದ ವಾಹನಗಳನ್ನು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ ಹಂತ-ಹಂತವಾಗಿ ನಾಶಪಡಿಸಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ.
4
+ ಅತೀ ಹೆಚ್ಚು ವರ್ಷಗಳನ್ನು ಪೂರೈಸಿರುವ ವಾಹನಗಳನ್ನು ಮೊದಲು ನಾಶ ಪಡಿಸಲು ಆದ್ಯತೆ ನೀಡಬೇಕು ಎಂದು ಸಾರಿಗೆ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ನಾಶಪಡಿಸಲು ಉದ್ದೇಶಿಸಿರುವ ವಾಹನದ ಮೇಲಿನ ಕೊನೆಯ ಒಂದು ವರ್ಷದಲ್ಲಿ ಸಾರಿಗೆ ಇಲಾಖೆಯ ಶಾಸನದ ಕ್ರಮದಡಿಯಲ್ಲಿ ದಾಖಲಾದ ಪ್ರಕರಣದ ದಂಡಗಳು ಮತ್ತು ಪೊಲೀಸ್ ಇಲಾಖೆಯ ಸಂಚಾರ ನಿಯಮ ಉಲ್ಲಂಘಟನೆಯಡಿ ದಾಖಲಾದ ಪ್ರಕರಣಗಳಿಗೆ ಸೀಮಿತಗೊಳಿಸಿ ದಂಡಗಳ ವಸೂಲಾತಿಗಳಿಂದ ವಿನಾಯಿತಿ ನೀಡಲಾಗಿದೆ.
5
+ ಕರ್ನಾಟಕ ಬಂದ್ : ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಕಂಪ್ಲೀಟ್ ಚಿತ್ರಣ
6
+ ಈ ವಿನಾಯಿತಿಯೂ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ಮಾತ್ರ ಅನ್ವಯವಾಗುವಂತೆ ವಿನಾಯಿತಿ ನೀಡಲಾಗಿದೆ. ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. 15 ವರ್ಷ ಮೀರಿದ ಸರ್ಕಾರಿ ವಾಹನಗಳ ನೊಂದಾಯಿತ ಪ್ರಮಾಣಪತ್ರವನ್ನು ನವೀಕರಿಸಲು ನಿಷೇಸಲಾಗಿದ್ದು, ಅಂತಹ ವಾಹನಗಳನ್ನು ಕಡ್ಡಾಯವಾಗಿ ಕೇಂದ್ರ ಮೋಟಾರು ವಾಹನಗಳ ನಿಯಮದ ಪ್ರಕಾರ ನಾಶಪಡಿಸಬೇಕಾಗಿದೆ.
7
+ ನಾಶಪಡಿಸಲಾದ ವಾಹನಗಳ ಮೇಲಿನ ಬಾಕಿ ಇರುವ ಹೊಣೆಗಾರಿಕೆಗಳನ್ನು ಒಂದು ಬಾರಿಗೆ ಅನ್ವಯವಾಗುವಂತೆ ಒಂದು ವರ್ಷದ ಅವಗೆ ಸೀಮಿತವಾಗಿ ಮನ್ನಾ ಮಾಡುವ ಬಗ್ಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ. ಅಲ್ಲದೆ, ಹಳೆಯ ವಾಹನಗಳನ್ನು ನಾಶಮಾಡಲು ಕೇಂದ್ರ ಸರ್ಕಾರ 200 ಕೋಟಿ ರೂ.ಗಳನ್ನು ಪೊ್ರೀತ್ಸಾಹವನ್ನು ನಿಗದಿಪಡಿಸಿದೆ.
8
+ ಮೂರು ಮೈಸ್ಟೋನ್ಗಳ ಗುರಿಗಳನ್ನು ಪೊ್ರೀತ್ಸಾಹ ಧನ ಪಡೆಯಲು ನಿಗದಿಪಡಿಸಿದೆ. ಅದರಂತೆ ರಾಜ್ಯ ಸರ್ಕಾರವೂ ಮೊದಲ ಮೈನ್ಸ್ ಸ್ಟೋರ್ನಲ್ಲಿ ನಿಗದಿ ಪಡಿಸಿರುವ ಗುರಿಗಳನ್ನು ಪೂರ್ಣಗೊಳಿಸಿದರೆ ಕೇಂದ್ರ ಸರ್ಕಾರದ ನೂರು ಕೋಟಿ ಪೊ್ರೀತ್ಸಾಹಕ ಅನುದಾನ ಲಭ್ಯವಾಗಲಿದೆ.
eesanje/url_46_339_2.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ
2
+ ಬೆಂಗಳೂರು,ಅ.1- ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು ಬೆಳಿಗ್ಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಮುಖಂಡರೂ ಆಗಿರುವ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್ ಈ ಸಂದರ್ಭದಲ್ಲಿ ಹಾಜರಿದ್ದರು. ಹೆಚ್ಚುವರಿ ಉಪಮುಖ್ಯಮಂತ್ರಿಗಳ ಬೇಡಿಕೆ ವಿವಾದದ ನಡುವೆಯೇ ನಡೆದಿರುವ ಈ ಸಭೆ ಕುತೂಹಲ ಕೆರಳಿಸಿದೆ.
3
+ ಬಿಜೆಪಿ ಟೀಕೆ ಅಪ್ರಸ್ತುತ:ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇದೊಂದು ಸೌಜನ್ಯದ ಭೇಟಿ ಎಂದು ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, ಬೆಂಗಳೂರಿನ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆ ಕುರಿತು ಬಿಜೆಪಿ ನಾಯಕರು ಟೀಕೆ ಮಾಡುತ್ತಿರುವುದು ಅಪ್ರಸ್ತುತ. ಗಲಾಟೆ ನಡೆದು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಾಗ ಗೃಹ ಸಚಿವರಾಗಿದ್ದವರ್ಯಾರು, ಮುಖ್ಯಮಂತ್ರಿಯಾಗಿದ್ದವರ್ಯಾರು ಎಂದು ಪ್ರಶ್ನಿಸಿದರು.
4
+ “ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ”
5
+ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಶಾಸಕರ ಮನೆಯಷ್ಟೇ ಅಲ್ಲ, ಕನಿಷ್ಠ ಪೊಲೀಸ್ ಠಾಣೆಯನ್ನೂ ರಕ್ಷಣೆ ಮಾಡಲಾಗಲಿಲ್ಲ. ಗಲಭೆಕೋರರು ಠಾಣೆಗೆ ಬೆಂಕಿ ಹಚ್ಚಿದ್ದರು. ಆ ಎಲ್ಲಾ ಘಟನೆಗಳು ನಮ್ಮ ಕಣ್ಣೆದುರಿಗೇ ಇವೆ. ಬಿಜೆಪಿಯವರು ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು.
6
+ ಈಗಷ್ಟೇ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಬಂದಿದೆ. ಅದರಲ್ಲಿ ಯಾವೆಲ್ಲಾ ಅಂಶಗಳನ್ನು ಪರಿಗಣಿಸಬೇಕು ಎಂಬ ವಿಚಾರಗಳನ್ನು ಸರ್ಕಾರ ಪರಿಶೀಲಿಸಲಿದೆ. ಪ್ರಕರಣ ನಡೆದಾಗ ಬಿಜೆಪಿಯವರು ಏನು ಮಾಡುತ್ತಿದ್ದರು ಎಂಬುದಕ್ಕೆ ಮೊದಲು ಉತ್ತರ ಕೊಡಲಿ ಎಂದು ಸವಾಲು ಹಾಕಿದರು.
7
+ ಗಲಭೆ ಕುರಿತು ಬಿಜೆಪಿಯವರು ತನಿಖೆ ಮಾಡಿ ವರದಿ ನೀಡಿಲ್ಲ. ಮ್ಯಾಜಿಸ್ಟ್ರೇಟ್ ತನಿಖೆ ಆಗಿದೆ. ಪ್ರತಿಯೊಂದಕ್ಕೂ ಬಿಜೆಪಿಯವರು ಹೇಳಿದಾಕ್ಷಣವೇ ನಾವು ಪ್ರತಿಕ್ರಿಯಿಸಬೇಕೆಂದೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ನಾಯಕರು ವೈಯಕ್ತಿಕ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಮೈತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವವರ ವಿರುದ್ಧ ಕುಮಾರಸ್ವಾಮಿ ಉಡಾಫೆಯಿಂದ ಮಾತನಾಡುತ್ತಿದ್ದಾರೆ. ಇದರ ಅರ್ಥ ಕುಮಾರಸ್ವಾಮಿಯವರಿಗೆ ಜನರೂ ಬೇಕಾಗಿಲ್ಲ, ಜಾತ್ಯತೀತ ತತ್ವ ಮತ್ತು ಸಂವಿಧಾನವೂ ಬೇಕಾಗಿಲ್ಲ ಎಂಬುದಾಗಿದೆ ಎಂದರು.
8
+ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆ 209 ರೂ. ಏರಿಕೆ
9
+ ಜಾತ್ಯತೀತ ಜನತಾದಳದಲ್ಲಿ ಈಗ ಜಾತ್ಯತೀತ ಜನರೂ ಇಲ್ಲ, ಜಾತ್ಯತೀತ ತತ್ವವೂ ಇಲ್ಲ. ನಾಯಕರ ವಲಸೆ ಹೆಚ್ಚಾಗುತ್ತಿರುವುದರಿಂದ ಮುಂದೆ ದಳವೂ ಉಳಿಯುವುದಿಲ್ಲ. ಅಲ್ಪಸಂಖ್ಯಾತರಷ್ಟೇ ಅಲ್ಲ, ತತ್ವ ಸಿದ್ಧಾಂತವನ್ನು ನಂಬಿ ಜೆಡಿಎಸ್‍ನಲ್ಲಿದ್ದ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ.
10
+ ರಾಜಕೀಯದಲ್ಲಿರುವವರು ಕುಟುಂಬ ಅಥವಾ ವ್ಯಕ್ತಿಯನ್ನಷ್ಟೇ ನಂಬಿ ಪಕ್ಷದಲ್ಲಿರುವುದಿಲ್ಲ, ಸಿದ್ಧಾಂತವನ್ನು ನಂಬಿರುತ್ತಾರೆ. ಅದಕ್ಕೆ ಧಕ್ಕೆಯಾದಾಗ ಸಹಜವಾಗಿಯೇ ಅಲ್ಲಿಂದ ಹೊರಬರುವುದು ಸಾಮಾನ್ಯ. ಜೆಡಿಎಸ್‍ನಿಂದ ಹೊರಬಂದವರು ಕಾಂಗ್ರೆಸ್ ಸಿದ್ಧಾಂತ ನಂಬಿ ನಮ್ಮ ಪಕ್ಷ ಸೇರುವುದಾದರೆ ಸ್ವಾಗತಿಸುತ್ತೇವೆ ಎಂದರು.
eesanje/url_46_339_3.txt ADDED
@@ -0,0 +1,8 @@
 
 
 
 
 
 
 
 
 
1
+ ಶೆಟ್ಟರ್‌ಗೆ ಡಿಸಿಎಂ ಸ್ಥಾನ ನೀಡುವಂತೆ ಸಿಎಂಗೆ ಪತ್ರ
2
+ ಬೆಂಗಳೂರು,ಅ.1- ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯಿತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪದ ನಡುವೆಯೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಕೂಗು ಕೇಳಿ ಬಂದಿದೆ.
3
+ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಮಂಜುನಾಥ ಯಂಟ್ರಾವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಕಾಂಗ್ರೆಸ್‍ನಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ಚರ್ಚೆಗಳು ನಡೆದ ವೇಳೆಯಲ್ಲಿ ಪ್ರಭಾವಿ ಮುಖಂಡರಾಗಿರುವ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರು ಮುಂಚೂಣಿಗೆ ಬಂದಿತ್ತು. ಸಿದ್ದರಾಮಯ್ಯ ಅವರ ಆಪ್ತರಾಗಿರುವ ಎಂ.ಬಿ.ಪಾಟೀಲ್‍ಗೆ ಪೈಪೋಟಿ ನೀಡುವಂತೆ ಜಗದೀಶ್ ಶೆಟ್ಟರ್ ಅವರ ಹೆಸರು ಕೇಳಿಬಂದಿದೆ.
4
+ ಶ್ಯಾಮನೂರು ಶಿವಶಂಕರಪ್ಪ ಅವರು ಸಮುದಾಯಕ್ಕೆ ಉಪಮುಖ್ಯಮಂತ್ರಿ ಹುದ್ದೆ ಅಗತ್ಯವಿಲ್ಲ. ನಮಗೇನಿದ್ದರೂ ಮುಖ್ಯಮಂತ್ರಿ ಸ್ಥಾನವೇ ಬೇಕು ಎಂದು ಹೇಳಿಕೆ ನೀಡಿದ್ದರು. ಅದರ ಹೊರತಾಗಿಯೂ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಜಾತಿವಾರು ಆದ್ಯತೆ ನೀಡಬೇಕು. 5 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಚರ್ಚೆಗಳಾಗುತ್ತಿವೆ.
5
+ ಮಂಗೋಲಿಯಾದಲ್ಲಿ 648 ಮಿಲಿಯನ್ ಡಾಲರ್ ಗುತ್ತಿಗೆ ಪಡೆದ ಎಂಇಐಎಲ್
6
+ ಈ ಹಂತದಲ್ಲಿ ಜಗದೀಶ್ ಶೆಟ್ಟರ್‍ರನ್ನು ಲಿಂಗಾಯಿತ ಸಮುದಾಯದಿಂದ ಪರಿಗಣಿಸಬೇಕು ಎಂಬ ಬೇಡಿಕೆ ಸಂಚಲನ ಮೂಡಿಸಿದೆ. ವಿಧಾನಸಭೆ ಚುನಾವಣಾ ವೇಳೆ ಬಿಜೆಪಿಯಿಂದ ಕಾಂಗ್ರೆಸ್‍ಗೆ ವಲಸೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಅವರನ್ನು ಕಾಂಗ್ರೆಸ್ ಗೌರವಯುತವಾಗಿ ನಡೆಸಿಕೊಳ್ಳುವ ಸಲುವಾಗಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ.
7
+ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆ 209 ರೂ. ಏರಿಕೆ
8
+ ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಅವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂಬ ಚರ್ಚೆಗಳಿವೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಅಸಮಾಧಾನಗೊಂಡು ಪಕ್ಷಾಂತರ ಮಾಡುತ್ತಿರುವ ಹಲವು ನಾಯಕರನ್ನು ಸೆಳೆಯಲು ಜಗದೀಶ್ ಶೆಟ್ಟರ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಉಪಮುಖ್ಯಮಂತ್ರಿ ಹುದ್ದೆ ಚರ್ಚೆಯಾದ ಹೊತ್ತಿನಲ್ಲಿ ಅವರ ಹೆಸರು ಕೇಳಿಬಂದಿರುವುದು ಕುತೂಹಲ ಕೆರಳಿಸಿದೆ.
eesanje/url_46_339_4.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಳಗಾವಿಯಲ್ಲಿ ವೇದಿಕೆ ಸಿದ್ದ
2
+ ಬೆಂಗಳೂರು,ಅ.1- ಕುರುಬ ಸಮುದಾಯದಲ್ಲೇ ದೇಶಾದ್ಯಂತ ಪ್ರಭಾವಿ ನಾಯಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ವಿರೋಧಿಗಳಿಗೆ ಅಕ್ಟೋಬರ್ 3 ರಂದು ನಡೆಯಲಿರುವ ರಾಷ್ಟ್ರೀಯ ಸಮಾವೇಶದಲ್ಲಿ ಪ್ರತ್ಯುತ್ತರ ನೀಡಲಿದ್ದಾರೆ.
3
+ ಬೆಳಗಾವಿಯಲ್ಲಿ ಅಕ್ಟೋಬರ್ 3 ರಂದು ನಡೆಯುವ ರಾಷ್ಟ್ರೀಯ ಮಟ್ಟದ ಕುರುಬರ ಸಮಾವೇಶ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಮಾರ್ಪಡುತ್ತಿದೆ. ಸುಮಾರು 2 ಲಕ್ಷ ಜನರಿಗೂ ಮೇಲ್ಪಟ್ಟ ಪ್ರತಿನಿಧಿಗಳು ಭಾಗವಹಿಸುವ ಈ ಸಮಾವೇಶದಲ್ಲಿ ವಿವಿಧ ರಾಜ್ಯಗಳ ನೂರಾರು ಪ್ರಮುಖರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
4
+ ಕಾಂಗ್ರೆಸ್‍ನಲ್ಲಿ ಒಳಬೇಗುದಿಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ನಡೆಯುತ್ತಿರುವ ಅಖಿಲ ಭಾರತೀಯ ರಾಷ್ಟ್ರೀಯ ಕುರುಬ ಸಮಾವೇಶ ಮತ್ತು 9ನೇ ವಾರ್ಷಿಕ ರಾಷ್ಟ್ರೀಯ ಪ್ರತಿನಿಧಿಗಳ ಮಹಾ ಸಮಾವೇಶ ಹಾಗೂ ರಾಷ್ಟ್ರೀಯ ಸನ್ಮಾನ ಕಾರ್ಯಕ್ರಮಗಳು ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳಿಗೆ ಇದು ಪ್ರತ್ಯುತ್ತರವಾಗಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ.
5
+ ಅರಣ್ಯ ಇಲಾಖೆಯ ಕಾರ್ಯಕ್ಕೆ ರಾಜ್ಯಪಾಲರ ಮೆಚ್ಚುಗೆ
6
+ ಇತ್ತೀಚೆಗೆ ಕಾಂಗ್ರೆಸ್‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‍ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಸಿ, ಅಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯನವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಸರ್ಕಾರದಲ್ಲಿ ಕೆಲವರಿಗೆ ಮಾತ್ರ ಆದ್ಯತೆ ಸಿಗುತ್ತಿದೆ. ಒಂದು ಸಮುದಾಯಕ್ಕೆ ಎಲ್ಲಾ ಅವಕಾಶಗಳೂ ಲಭ್ಯವಾಗುತ್ತಿವೆ. ಸಣ್ಣಪುಟ್ಟ ಹಾಗೂ ಹಿಂದುಳಿದ ವರ್ಗಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನ ಹೊರಹಾಕಿದರು.
7
+ ಅದರ ಬೆನ್ನಲ್ಲೇ ಇತ್ತೀಚೆಗೆ ಹಿರಿಯ ಕಾಂಗ್ರೆಸ್ ನಾಯಕ ಶ್ಯಾಮನೂರು ಶಿವಶಂಕರಪ್ಪ ಲಿಂಗಾಯಿತರನ್ನು ಕಡೆಗಣಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಗೊಂದಲಗಳಿಗೆ ಸಮಾವೇಶದಲ್ಲಿ ಸಿದ್ದರಾಮಯ್ಯ ತಕ್ಕ ಉತ್ತರ ನೀಡುವ ಸಾಧ್ಯತೆಯಿದೆ. ಕರ್ನಾಟಕದಲ್ಲಷ್ಟೇ ಅಲ್ಲದೆ ದಕ್ಷಿಣ ಭಾರತದ ರಾಜ್ಯಗಳಲ್ಲೂ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರಾಗಿರುವ ಸಿದ್ದರಾಮಯ್ಯ ಕುರುಬ ಸಮುದಾಯದಲ್ಲಿ ಏಕಮೇವಾದ್ವಿತೀಯರಾಗಿದ್ದಾರೆ.
8
+ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದರೂ ರಾಜ್ಯ ರಾಜಕಾರಣದಲ್ಲಿ ತಮಗೆ ಆಸಕ್ತಿ ಎಂದು ಪದೇಪದೇ ಹೇಳುವ ಸಿದ್ದರಾಮಯ್ಯ, ಸಮುದಾಯದ ಸಂಘಟನೆ ವಿಷಯ ಬಂದಾಗ ಬದ್ಧತೆಯ ರಾಜಕಾರಣಿಯಾಗಿ ನಡೆದುಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ವೈಭವೀಕರಿಸಲು ಈ ಸಮಾವೇಶದಲ್ಲಿ ವೇದಿಕೆ ಸಜ್ಜುಗೊಂಡಿದೆ.
9
+ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು
10
+ ಈ ಹಿಂದೆ ದಾವ���ಗೆರೆಯಲ್ಲಿ ನಡೆದ ಸಿದ್ಧರಾಮೋತ್ಸವ ಶಕ್ತಿ ಪ್ರದರ್ಶನದ ವೇದಿಕೆಯಾಗಿತ್ತು. ಅದು ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ಹೆಚ್ಚು ಬಲ ತಂದುಕೊಟ್ಟಿತ್ತು. ಎರಡನೇ ಬಾರಿ ಅಧಿಕಾರದ ಗದ್ದುಗೆ ಹಿಡಿದಿರುವ ಸಿದ್ದರಾಮಯ್ಯ ಅವರನ್ನು ಬೆಳಗಾವಿ ಸಮಾವೇಶ ಮತ್ತಷ್ಟು ಗಟ್ಟಿಗೊಳಿಸಲಿದೆ ಎಂಬ ಲೆಕ್ಕಾಚಾರಗಳಿವೆ.
eesanje/url_46_339_5.txt ADDED
@@ -0,0 +1,7 @@
 
 
 
 
 
 
 
 
1
+ “ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ”
2
+ ರಾಯಚೂರು,ಅ.1- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದಂತೆ 6 ತಿಂಗಳಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗುವುದಿಲ್ಲ, 5 ವರ್ಷ ಅಧಿಕಾರವ ಪೂರ್ಣಗೊಳಿಸಲಿದೆ ಎಂದು ಸಣ್ಣ ನೀರಾವರಿ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜ್ ಸ್ಪಷ್ಟಪಡಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಿಂದ ಅಸಮಾಧಾನಗೊಂಡು ಜೆಡಿಎಸ್‍ನ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಅವರಿಗೆ ಧೈರ್ಯ ಹೇಳುವ ಸಲುವಾಗಿ ಕುಮಾರಸ್ವಾಮಿ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ ಎಂದು ಲೇವಡಿ ಮಾಡಿದರು.
4
+ ಈ ಹಿಂದೆ ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದಾಗ ಅದನ್ನು ಉಳಿಸಿಕೊಳ್ಳಲಾಗಲಿಲ್ಲ. ಕಾಂಗ್ರೆಸ್‍ನ ಎಲ್ಲರೂ ಕುಮಾರಸ್ವಾಮಿಯವರಿಗೆ ಬೆಂಬಲ ನೀಡಿದ್ದರು. ಶಕ್ತಿ ಇದ್ದರೆ ಅವರು ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಬಹುದಿತ್ತು. ಆದರೆ ಕುಮಾರಸ್ವಾಮಿಯವರಿಂದ ಅದು ಸಾಧ್ಯವಾಗಲಿಲ್ಲ ಎಂದರು.
5
+ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು
6
+ ಕುಮಾರಸ್ವಾಮಿ ಅವರಿಗೆ ಪಕ್ಷ ಉಳಿಸಿಕೊಳ್ಳಬೇಕಿದೆ. ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಹೀಗಾಗಿ ಕಾರ್ಯಕರ್ತರಿಗೆ ಧೈರ್ಯ ಹೇಳಲು ಅರ್ಥವಿಲ್ಲದ ಮಾತುಗಳನ್ನಾಡುತ್ತಿದ್ದಾರೆ. ಅದಕ್ಕೆ ಒತ್ತು ನೀಡಬೇಕಿಲ್ಲ. ಪ್ರತಿಯೊಂದರಲ್ಲೂ ಹಿಟ್ ಅಂಡ್ ರನ್ ಧೋರಣೆ ಅನುಸರಿಸುತ್ತಾರೆ ಎಂದು ತಿರುಗೇಟು ನೀಡಿದರು.
7
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರರನ್ನು ವರುಣ ಕ್ಷೇತ್ರದ ಶಾಸಕ ಎಂದು ಎಲ್ಲಿಯೂ ಹೇಳಿಲ್ಲ. ಸಹಜವಾಗಿ ರಾಜಕಾರಣಿಗಳು ಕ್ಷೇತ್ರದ ಜನ ಬಂದಾಗ ಈ ರೀತಿ ಮಾತನಾಡುವುದು ಸರ್ವೆ ಸಾಮಾನ್ಯ. ಈ ಹಿಂದೆ ದೇವೇಗೌಡರು ಪ್ರಧಾನಿಯಾಗಿದ್ದಾಗ ಕುಮಾರಸ್ವಾಮಿ ಹೇಗೆಲ್ಲಾ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದರು ಎಂದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
eesanje/url_46_339_6.txt ADDED
@@ -0,0 +1,7 @@
 
 
 
 
 
 
 
 
1
+ ಅರಣ್ಯ ಇಲಾಖೆಯ ಕಾರ್ಯಕ್ಕೆ ರಾಜ್ಯಪಾಲರ ಮೆಚ್ಚುಗೆ
2
+ ಬೆಂಗಳೂರು, ಅ.1- ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಅರಣ್ಯ ಇಲಾಖೆ ಮಾಡುತ್ತಿರುವ ಕಾರ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಭವನದಲ್ಲಿಂದು ಅರಣ್ಯ ಇಲಾಖೆ 69ನೇ ವನ್ಯಜೀವಿ ಸಪ್ತಾಹದ ಬಗ್ಗೆ ಜನಜಾಗೃತಿ ಮೂಡಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಂಟೇಜ್ ವಾಹನ ಯಾನಕ್ಕೆ ಹಸಿರು ನಿಶಾನೆ ನೀಡುವ ಮೂಲಕ ಮಾತನಾಡಿದ ಅವರು, ತಾವು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಶ್ರೀ ವೀರೇಂದ್ರ ಹೆಗ್ಗಡೆಯವರ ಸಂಗ್ರಾಹಾಲಯದಲ್ಲಿ ಹಳೆಯ ವಾಹನಗಳನ್ನು ನೋಡಿದ್ದೆ.
3
+ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ವನ್ಯಜೀವಿ ಸಂರಕ್ಷಣೆಯ ಅರಿವು ಮೂಡಿಸಲು ಹಳೆಯ ವಾಹನ ಯಾನ ಆಯೋಜಿಸಿರುವುದಕ್ಕೆ ಸಂತಸ ತಂದಿದೆ ಎಂದರು.ಪ್ರಕೃತಿ ಪರಿಸರ ಉಳಿಸುವ ಅಗತ್ಯವನ್ನು ರಾಜ್ಯಪಾಲರು ಪ್ರತಿಪಾದಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ರಾಜ್ಯ ಮಾದರಿಯಾಗಿದೆ. 6395 ಆನೆಗಳು ರಾಜ್ಯದಲ್ಲಿದ್ದು, ದೇಶದಲ್ಲೇ ನಾವು ಗಜ ಗಣತಿಯಲ್ಲಿ ಮೊದಲಿಗರಾಗಿದ್ದೇವೆ ಎಂದರು.
4
+ ಸಿಖ್ ಸಮುದಾಯ ಸಮಸ್ಯೆ ನಿವಾರಣೆಗೆ ಪ್ರಧಾನಿ ಮೋದಿ ಆದ್ಯತೆ : ಜೈಶಂಕರ್
5
+ ಅದೇ ರೀತಿ ಹುಲಿ ಗಣತಿಯಲ್ಲೂ ರಾಜ್ಯ ನಂ.2 ಸ್ಥಾನ ಪಡೆದಿದೆ. ಇಲಾಖೆಯ ಹಸಿರು ಹೊದಿಕೆ ವ್ಯಾಪ್ತಿಯನ್ನು ಹೆಚ್ಚಿಸಲು ಮತ್ತು ನಗರ ಪ್ರದೇಶಗಳಲ್ಲಿ ಕೂಡ ಜನರು ನೆಮ್ಮದಿಯಿಂದ ಉಸಿರಾಡಲು ಸಾಮಾಜಿಕ ಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ.
6
+ ಕಳೆದ ಜುಲೈ 1ರಿಂದ ಇಲ್ಲಿಯವರೆಗೆ 4 ಕೋಟಿ 75 ಲಕ್ಷ ಸಸಿಗಳನ್ನು ನೆಡಲಾಗಿದೆ. ಮುಂದಿನ ಒಂದು ವಾರದಲ್ಲಿ ಉಳಿದ 25 ಲಕ್ಷ ಸಸಿ ನೆಟ್ಟು ಈ ವರ್ಷ 5 ಕೋಟಿ ಗಿಡ ನೆಡಬೇಕು ಎಂಬ ಗುರಿಯನ್ನು ಪೂರೈಸಲಾಗುವುದು ಎಂದರು.
7
+ ಹಳೆಯ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟು, ಅವುಗಳನ್ನು ಸಂಚಾರ ಯೋಗ್ಯವಾಗಿರುವಂತೆ ನಿರ್ವಹಣೆ ಮಾಡುತ್ತಿರುವ ಹಳೆಯ ವಾಹನಗಳ ಮಾಲೀಕರಿಗೆ ಅವರು ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
eesanje/url_46_339_7.txt ADDED
@@ -0,0 +1,8 @@
 
 
 
 
 
 
 
 
 
1
+ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್
2
+ ಬೆಂಗಳೂರು,ಸೆ.30- ಕಳೆದ ಎರಡು ವರ್ಷಗಳಿಂದಲೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಆರೋಪಿ ಶಿವಾಜಿರಾವ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯಕ್, ವಸುಂಧರಾ ಭೂಪತಿ ಸೇರಿದಂತೆ 7 ಕ್ಕೂ ಹೆಚ್ಚು ಸಾಹಿತಿಗಳಿಗೆ ಪದೇಪದೇ ಜೀವಬೆದರಿಕೆಯ
3
+ ಪತ್ರಗಳು ಬರುತ್ತಿದ್ದವು. ಈ ಬಗ್ಗೆ ಚಿತ್ರದುರ್ಗ, ಕೊಟ್ಟೂರು, ಸಂಜಯನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು, ಹಾರೋಹಳ್ಳಿ, ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿ ಒಟ್ಟು 7 ಪ್ರಕರಗಣಗಳು ದಾಖಲಾಗಿದ್ದವು.
4
+ ಈ ಹಿಂದೆ ರಾಜ್ಯದಲ್ಲಿ ಸಾಹಿತಿ ಎಂ.ಎಂ.ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಸಾಹಿತಿಗಳಿಗೆ ಬರುತ್ತಿರುವ ಬೆದರಿಕೆ ಪತ್ರ ಆತಂಕ ಮೂಡಿಸಿತ್ತು. ಖುದ್ದು ಮುಖ್ಯಮಂತ್ರಿ, ಗೃಹಸಚಿವರುಗಳೇ ಸಾಹಿತಿಗಳೊಂದಿಗೆ ಸಭೆ ನಡೆಸಿ ಸಮಾಲೋಚಿಸಿದ್ದರು. ಪ್ರಕರಣವನ್ನು ಕಳೆದ ತಿಂಗಳು ಸಿಸಿಬಿ ತನಿಖೆಗೆ ವಹಿಸಲಾಗಿತ್ತು.
5
+ ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ
6
+ ಪತ್ರದ ಹಸ್ತಾಕ್ಷರ ಹಾಗೂ ಪೊಸ್ಟ್ ಮಾಡಲಾಗಿದ್ದ ಸ್ಥಳಗಳ ಜಾಡು ಹಿಡಿದ ಸಿಸಿಬಿ ಪೊಲೀಸರು ಸೆ.28 ರಂದು ಆರೋಪಿಯನ್ನು ದಾವಣಗೆರೆ ಯಲ್ಲಿ ಬಂಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಪ್ರಕರಣಗಳಲ್ಲಷ್ಟೇ ಅಲ್ಲದೆ, ಆರೋಪಿ ವಿರುದ್ಧ ಈ ಮೊದಲು ಎರಡು ಪ್ರಕರಣಗಳು ದಾಖಲಾಗಿದ್ದ ಮಾಹಿತಿ ಇದೆ.
7
+ 7 ಮಂದಿಯ ಜೊತೆಗೆ ಇನ್ನೂ ಹಲವು ಸಾಹಿತಿಗಳಿಗೆ ಆರೋಪಿ ಬೆದರಿಕೆ ಪತ್ರ ಬರೆದಿರುವ ಬಗ್ಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈತ ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಎಂದು ಹೇಳಲಾಗಿದೆ.
8
+ ಆರೋಪಿಯ ಕೃತ್ಯಕ್ಕೆ ಯಾರು ಸಹಕಾರ ನೀಡಿದ್ದಾರೆ, ಇವರ ಯೋಜನೆಯೇನು, ಇದಕ್ಕಾಗಿ ಅವರು ಮಾಡಿಕೊಂಡಿರುವ ಸಿದ್ಧತೆಗಳೇನು ಹಾಗೂ ಇತರ ರೂಪುರೇಷೆಗಳ ಬಗ್ಗೆ ವಿಚಾರಣೆ ನಡೆಸುವ ಸಲುವಾಗಿ ಶಿವಾಜಿರಾವ್ನನ್ನು 13 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.
eesanje/url_46_339_8.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾವೇರಿ ಆದೇಶದ ಕುರಿತು ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ : ಸಚಿವ ಎಚ್.ಕೆ.ಪಾಟೀಲ್
2
+
3
+ ಹುಬ್ಬಳ್ಳಿ,ಸೆ.30- ತಮಿಳುನಾಡಿಗೆ ಕಾವೇರಿ ಮ್ಯಾನೇಜ್ಮೆಂಟ್ ಪ್ರಾಧಿಕಾರ ಮತ್ತೇ ನೀರು ಬಿಡಬೇಕು ಎಂಬ ಆದೇಶ ಕುರಿತು ನಾವು ಸುಪ್ರೀಂ ಕೋರ್ಟ್ ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಹೇಳಿದರು.
4
+ ಈ ಕುರಿತು ಇಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಬಹಳ ನೋವು ತಂದಿದ್ದು ಮತ್ತೇ ಕಾವೇರಿ ನಿರ್ವಹಣ ಅಭಿವೃದ್ಧಿ ಪ್ರಾಕಾರ ಮತ್ತೇ ನೀರು ಬಿಡಸಲು ಆದೇಶ ಮಾಡಿದ್ದು ನಿಜ. ಆದರೆ ಇದರಿಂದ ನಮಗೂ ಸಮಸ್ಯೆ ಎದುರಾಗಿದೆ ಎಂದರು.
5
+ ಈ ಕುರಿತು ನಿನ್ನೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ವೆಂಕಟಾಚಲ, ಶಿವರಾಜ್ ಪಾಟೀಲ್, ರವೀಂದ್ರ, ಶೆಟ್ಟಿ ಅವರ ಜೊತೆ ಚರ್ಚೆ ಮಾಡಲಾಗಿದ್ದು ಅವರ ಸಲಹೆ ಸೂಚನೆಗಳನ್ನು ಪಡೆಯಲಾಗಿದೆ.
6
+ ಮಕ್ಕಳ ಜೊತೆ ಸೇರಿ ಪತ್ನಿಯ ತಲೆ ಕಡಿದ ಪತಿ..!
7
+ ಏನೆಲ್ಲಾ ಕಾನೂನು ತೊಡಕು ಇವೆ ಆ ಬಗ್ಗೆ ಮಾಹಿತಿ ಪಡೆಯಲಾಗಿದೆ ಸರಿಯಾಗಿ ಮತ್ತು ಮನವರಿಕೆ ಆಗುವಂತೆ ನಮ್ಮ ಸಮಸ್ಯೆಗೆ ಏನು ಪರಿಹಾರ ಆ ಬಗ್ಗೆ ಸಹ ಮಾಹಿತಿ ಪಡೆಯಲಾಗಿದೆ ಎಂದ ಅವರು ರಾಜ್ಯದ ಹಿತಾಸಕ್ತಿಗೋಸ್ಕರ ಮಾಡುತ್ತೇವೆ ಆದರೆ ಕೇಂದ್ರ ಸರ್ಕಾರ ಮೌನ ಸರಿಯಲ್ಲ ಸಂಕಷ್ಟ ಸೋತ್ರ ಕಂಡು ಹಿಡಿಯಬೇಕಾಗಿದೆ , ಈಗಲಾದರು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಯಿಸಿದರು. ಕೆಆರ್‍ಎಸ್ ಹಾಗು ಕವೇರಿ ಜಲಾನಯನ ಭಾಗದ ಜಲಾಶಯದಲ್ಲಿ ನೀರು ಕಡಿಮೆ ಇದೆ ಈ ಬಗ್ಗೆ ಮನವರಿಕೆ ಮಾಡಿಕೊಡಬೇಕು ಸಂಕಷ್ಟ ಸೋತ್ರವೇ ಇದಕ್ಕೆ ಪರಿಹಾರ ಆದ್ದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದೆ ಬರಬೇಕು ಎಂದರು.
8
+ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗೆ ಕೇಂದ್ರ ಕಾನೂನು ಆಯೋಗದ ಚಿಂತನೆ ಇನ್ನು ಕೇಂದ್ರ ಸರ್ಕಾರ ಹಾಗೂ ಕಾನೂನು ಆಯೋಗದೇಶದಲ್ಲಿ ಏಕಕಾಲದಲ್ಲಿ ಚಿಂತನೆ ಮಾಡಿದ್ದು ಸರಿಯಲ್ಲಲೋಕಸಭಾ ಚುನಾವಣೆ ಮುಂದೂಡಲು ಈ ಹುನ್ನಾರ ಎಂದು ಗಂಭೀರ ಸ್ವರೂಪದ ಆರೋಪ ಮಾಡಿದರು.
9
+ ಲೋಕಸಭೆ ಅವ ಸಹ ಮುಂದೂಡುವ ಷಡ್ಯಂತ್ರ ಮಾಡಿದೆ ಎಂದ ಅವರು ನಾಲ್ಕು ವರ್ಷಗಳ ಏನು ಮಾಡಿದರಿ ಈಗ ಚುನಾವಣೆ ಬಂದಾಗ ಏಕೆ ಕೇಂದ್ರದ ಈ ನಿರ್ಧಾರ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣಾ ಆಯೋಗ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಸಹ ಅವರು ಸಲಹೆ ನೀಡಿದರು. ಮುಖಂಡರಾದ ಮಹೇಂದ್ರ ಸಿಂಘಿ, ವಸಂತ ಲದ್ವಾ ಮುಂತಾದವರು ಇದ್ದರು.
eesanje/url_46_339_9.txt ADDED
@@ -0,0 +1,6 @@
 
 
 
 
 
 
 
1
+ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
2
+ ಹುಬ್ಬಳ್ಳಿ,ಸೆ.30- ಜಿಲ್ಲಾ ಪಂಚಾಯತ ಸದಸ್ಯ ಹಾಗೂ ಬಿಜೆಪಿ ನಾಯಕರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾಡ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣದ ಸಾಕ್ಷಿಯಾಗಿದ್ದ ಗುರುನಾಥಗೌಡರಿಗೆ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪೊಲೀಸರು ವಿನಯ್ ಕುಲಕರ್ಣಿ ಪರ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿ ತನಿಖೆ ಮುಂದುವರಿಸುವಂತೆ ಆದೇಶಿಸಿದೆ.
3
+ ಅಸಮರ್ಪಕ ತನಿಖೆ ನಡೆಸಿದ ಧಾರವಾಡ ಉಪನಗರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ತನಿಖೆ ಮುಂದುವರಿಸುವಂತೆ ಸೂಚಿಸಿದೆ. ದೂರುದಾರ ಗುರುನಾಥಗೌಡ ಸಾಕ್ಷ್ಯವಾಗಿ ಸಿಡಿ ನೀಡಿದ್ದರೂ ಪೊಲೀಸರು ಪರಿಗಣಿಸಿಲ್ಲ ಎಂಬುದನ್ನು ಕೋರ್ಟ್ ಬೊಟ್ಟು ಮಾಡಿದೆ.ಡಿಜಿಟಲ್ ಸಾಕ್ಷ್ಯ ಪರಿಗಣಿಸದೇ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ, ಆರೋಪಿಗಳನ್ನು ತನಿಖೆಗೆ ಒಳಪಡಿಸದೇ ಬೇಜವಾಬ್ದಾರಿ ತೋರಿದ್ದಾರೆ.
4
+ ಮಕ್ಕಳ ಜೊತೆ ಸೇರಿ ಪತ್ನಿಯ ತಲೆ ಕಡಿದ ಪತಿ..!
5
+ ತನಿಖೆಗೆ ಸರ್ಕಾರದ ಪೂರ್ವಾನುಮತಿ ಬೇಕೆಂದು ತಪ್ಪು ಮಾಹಿತಿ ನೀಡಲಾಗಿದೆ. ತನಿಖಾಕಾರಿ ಕಾನೂನು ಅರಿಯಲು ವಿಫಲರಾಗಿದ್ದಾರೆ. ಹೀಗಾಗಿ ಪ್ರಕರಣದ ಮರುತನಿಖೆ ನಡೆಸುವಂತೆ ನ್ಯಾಯಾಧೀಶಾದ ಜೆ.ಪ್ರೀತ್ ಅವರ ಫೀಠ ಆದೇಶ ಹೊರಡಿಸಿದೆ.ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊಳಿಸುವ ಸಾಧ್ಯತೆ ಹಿನ್ನೆಲೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಹಲವು ಬಾರಿ ಪ್ರವೇಶ ಕೋರಿ ಕೋರ್ಟ್‍ಗೆ ಮನವಿ ಸಲ್ಲಿಸಿದ್ದ ಕುಲಕರ್ಣಿಗೆ ಅನುಮತಿ ಸಿಗುತ್ತಿಲ್ಲ ಇತ್ತೀಚೆಗೆ ನಡೆದ ವಿಚಾರಣೆಯಲ್ಲಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು.
6
+ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪ ಶಾಸಕ ವಿನಯ್ ಕುಲಕರ್ಣಿ ಮೇಲಿದ್ದು, ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಆದ್ದರಿಂದ ಬಿ ವರದಿ ಸಲ್ಲಿಕೆ ಸೂಕ್ತ ಸಮಯವಲ್ಲ ಎಂದು ನ್ಯಾಯಾಲಯ ಹೇಳಿದೆ.
eesanje/url_46_33_1.txt ADDED
@@ -0,0 +1,6 @@
 
 
 
 
 
 
 
1
+ ದಸರಾ ಆನೆಗಳ ಪಾದ ಪರಿಶೀಲನೆ
2
+
3
+ ಮೈಸೂರು, ಆ.27-ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿಯಲ್ಲಿ ಪಾಲ್ಗೊಳ್ಳುವ ಗಜ ಪಡೆಗೆ ತಾಲೀಮು ಬಿರುಸುನಿಂದ ನಡೆಯುತ್ತಿದ್ದು, ಆನೆಗಳ ಪಾದಗಳನ್ನು ಇಂದು ಅರಣ್ಯ ಇಲಾಖೆ ಹಾಗೂ ಮೆಟಲ್ಡಿಟೆಕ್ಟಿವ್ ಪರಿಶೀಲನೆ ನಡೆಸಲಾಯಿತು.
4
+ ವೀರನಹೊಸಳ್ಳಿ ಆನೆ ಕ್ಯಾಂಪ್ನಿಂದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ನಗರಕ್ಕೆ ಆಗಮಿಸಿದ್ದು, ಈಗಾಗಲೇ ಪ್ರತಿನಿತ್ಯ ತಾಲೀಮು ನಡೆಸಲಾಗುತ್ತಿದೆ.ಕಾಡಿನಲ್ಲಿ ಹಾಗೂ ನಗರದಲ್ಲಿ ಆನೆಗಳು ಸಂಚರಿಸುವಾಗ ಕಾಲುಗಳಿಗೆ ಕಬ್ಬಿಣದ ಮೊಳೆ ಹಾಗೂ ಮುಳ್ಳುಗಳು ನಾಟಿ ಪಾದಗಳ ಒಳಗೆ ಸಿಲುಕಿಕೊಂಡಿದ್ದರೆ ತಾಲೀಮಿಗೆ ತೊಂದರೆಯಾಗುತ್ತದೆ.
5
+ ಜೊತೆಗೆ ಅಂಬಾರಿ ಸಮಯದಲ್ಲಿ ಹೆಜ್ಜೆ ಹಾಕಲು ಅಳುಕುತ್ತವೆ ಎಂಬ ಉದ್ದೇಶದಿಂದ ಇಂದು ಎಲ್ಲಾ ಆನೆಗಳ ಕಾಲುಗಳ ಪಾದಗಳನ್ನು ಮೆಟಲ್ಡಿಟೆಕ್ಟಿವ್ ಉಪಕರಣದ ಮೂಲಕ ಪರಿಶೀಲನೆ ನಡೆಸಲಾಯಿತು.
6
+ ಪ್ರತಿದಿನ ತಾಲೀಮು ಮುಗಿಸಿದ ನಂತರ ಆನೆಗಳ ಪಾದಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇಲ್ಲಿಯವರೆಗೆ ಯಾವುದೇ ರೀತಿಯ ಕಬ್ಬಿಣದ ಮೊಳೆ ಅಥವಾ ಚೂರುಗಳು ಕಂಡು ಬಂದಿಲ್ಲ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ.
eesanje/url_46_33_10.txt ADDED
@@ -0,0 +1,7 @@
 
 
 
 
 
 
 
 
1
+ ದರ್ಶನ್ ಜೈಲಿನಲ್ಲಿದ್ದಾರೋ.. ? ರೆಸಾರ್ಟ್‌ನಲ್ಲಿದ್ದಾರೋ..? ಎಂಬ ಅನುಮಾನ ಮೂಡುತ್ತಿದೆ : ರೇಣುಕಾಸ್ವಾಮಿ ತಂದೆ
2
+
3
+ ಚಿತ್ರದುರ್ಗ,ಆ.26-ತಮ್ಮ ಪುತ್ರ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಜೈಲಿನಲ್ಲಿದ್ದಾರೋ ಅಥವಾ ರೆಸಾರ್ಟ್ನಲ್ಲಿದ್ದಾರೋ ಎಂಬ ಅನುಮಾನ ಮೂಡುತ್ತಿದೆ. ಜೈಲಿನಲ್ಲಿನ ವಾತಾವರಣದ ಬಗ್ಗೆ ಬಹಿರಂಗಗೊಂಡಿರುವ ಫೋಟೋ ಹಾಗೂ ವಿಡಿಯೋಗಳನ್ನು ನೋಡಿದರೆ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕಾಶಿನಾಥಯ್ಯ ತಿಳಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ತಮ ಪುತ್ರ ರೇಣುಕಾಸ್ವಾಮಿ ಕೊಲೆಗೆ ಸರ್ಕಾರ ಹಾಗೂ ನ್ಯಾಯಾಂಗದಿಂದ ನ್ಯಾಯ ಸಿಗಬಹುದೆಂಬ ನಂಬಿಕೆ ಇತ್ತು. ಈಗ ಬಿಡುಗಡೆಯಾಗಿರುವ ಪೋಟೋ, ವಿಡಿಯೋ ನೋಡಿದರೆ ಆಘಾತವಾಗಿದೆ. ಜೈಲಿನಲ್ಲಿ ಆರೋಪಿಗಳಿಗೆ ರಾಜ್ಯಾತಿಥ್ಯ ದೊರೆಯುತ್ತಿದೆ. ಆರೋಪಿಗಳು ಚರ್ಚೆ ಮಾಡಲು ಕುರ್ಚಿ ಟೇಬಲ್ಗಳನ್ನು ಹಾಕಲಾಗಿದೆ. ಟೀ ಕಪ್, ಸಿಗರೇಟ್ಗಳನ್ನು ಹಿಡಿದಿದ್ದಾರೆ ಎಂದು ಅಸಹನೆ ವ್ಯಕ್ತಪಡಿಸಿದರು.
5
+ ಪೊಲೀಸ್ ಅಧಿಕಾರಿಗಳ ತನಿಖೆಯ ಬಗ್ಗೆ ನಮಗೆ ನಂಬಿಕೆ ಇತ್ತು. ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದರೆ ಜೈಲಿನ ವಾತಾವರಣ ಗಾಬರಿಯಾಗುವಂತಿದೆ. ಕೈದಿಗಳಲ್ಲಿ ಶ್ರೀಮಂತ, ಬಡವ, ಸಾಹಿತಿ, ರಾಜಕಾರಣಿ ಎಂಬ ಬೇಧಭಾವ ಇರಬಾರದು. ಆದರೆ ದರ್ಶನ್ ಪ್ರಕರಣದಲ್ಲಿ ಲೋಪವಾಗಿದೆ. ಮುಖ್ಯಮಂತ್ರಿಯವರು ಕೂಡಲೇ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಹೇಳಿದರು.
6
+ ಜೈಲು ಅಧಿಕಾರಿಗಳ ಮೇಲೆ ಯಾವ ರೀತಿ ಒತ್ತಡ ಬಂದಿರಬಹು ದೆಂಬ ಅನುಮಾನ ಕಾಡುತ್ತಿದೆ. ದರ್ಶನ್ರಲ್ಲಿ ಪಶ್ಚಾತ್ತಾಪದ ಭಾವನೆ ಕಂಡುಬರುತ್ತಿಲ್ಲ. ನಗುತಾ ಆರಾಮಾಗಿದ್ದಾರೆ. ದರ್ಶನ್ ಅವರ ಹಿನ್ನಲೆ, ಜೈಲಿನ ವಾತಾವರಣ ಕುರಿತು ಸಮಗ್ರ ವಿಚಾರಣೆಯಾಗಬೇಕು. ಅದರಲ್ಲೂ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದಲೇ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದರು.
7
+ ತಮ ಪುತ್ರ ಕೈಮುಗಿದು ಬೇಡಿಕೊಂಡಾಗಲೂ ಕರುಣೆ ತೋರದೆ ಕೊಲೆ ಮಾಡಿದ ಆರೋಪಿಗಳಿಗೆ ಈಗ ಜೈಲಿನಲ್ಲಿ ಸುಖಾಸೀನ ಸೌಲಭ್ಯಗಳು ದೊರೆಯುತ್ತಿದೆ. ಇದನ್ನು ನೋಡಿದರೆ ತಮ ಪುತ್ರನ ಕೊಲೆಗೆ ನ್ಯಾಯ ದೊರೆಯುವುದೇ ಎಂಬ ಅನುಮಾನ ಕಾಡುತ್ತಿದೆ ಎಂದರು ಹೇಳಿದರು.
eesanje/url_46_33_11.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಭಾರೀ ಸಂಚಲನ ಸೃಷ್ಟಿಸಿರುವ ದರ್ಶನ್ ರಾಜಾತಿಥ್ಯ ಫೋಟೋ, ವಿಡಿಯೋ
2
+ ಬೆಂಗಳೂರು,ಆ.26-ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ಸಂಬಂಧ ಬಿಡುಗಡೆಯಾಗಿರುವ ಫೋಟೋಗಳು, ವಿಡಿಯೋಗಳು ಭಾರೀ ಸಂಚಲನ ಸೃಷ್ಟಿಸಿವೆ.
3
+ ಎರಡು ಫೋಟೋಗಳು, ಒಂದು ವಿಡಿಯೋ ಬಹಿರಂಗವಾಗಿವೆ. ಒಂದು ಫೋಟೋದಲ್ಲಿ ದರ್ಶನ್ ರೌಡಿಶೀಟರ್ ವಿಲ್ಸನ್ಗಾರ್ಡನ್ ನಾಗ, ಮತ್ತೊಬ್ಬ ರೌಡಿಶೀಟರ್ ಕುಳ್ಳ ಸೀನ, ಈ ಹಿಂದೆ ತಮ ಮ್ಯಾನೇಜರ್ ಆಗಿದ್ದ ನಾಗರಾಜ್ ಅವರೊಂದಿಗೆ, ಗಾರ್ಡನ್ನಲ್ಲಿ ಮೇಜು ಕುರ್ಚಿಗಳನ್ನು ಹಾಕಿಕೊಂಡು ಲೋಕಾಭಿರಾಮವಾಗಿ ಮಾತನಾಡುತ್ತಾ, ಸಿಗರೇಟ್ ಸೇದುತ್ತಾ ಮಗ್ನಲ್ಲಿ ಕಾಫಿ ಕುಡಿಯುತ್ತಿರುವುದು ಕಂಡುಬಂದಿದೆ.
4
+ ಮತ್ತೊಂದು ಫೋಟೋದಲ್ಲಿ ಜೈಲಿನ ಕೋಣೆಯ ಒಳಗೆ ದರ್ಶನ್ಗೆ ಬೆಡ್ನ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿ ಸಹ ಕೈದಿಯೊಂದಿಗೆ ದರ್ಶನ್ ಮಾತನಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಜೈಲಿನಲ್ಲಿರುವ ರೌಡಿಶೀಟರ್ವೊಬ್ಬ ಹೊರಗಿರುವ ತಮ ಪುತ್ರನಿಗೆ ವಿಡಿಯೋ ಕಾಲ್ ಮಾಡಿದ್ದು, ಅದರಲ್ಲಿ ದರ್ಶನ್ ಮಾತನಾಡಿರುವುದು ಕಂಡುಬಂದಿದೆ.
5
+ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿನ್ನೆ ಮಧ್ಯಾಹ್ನದಿಂದ ಇಡೀ ರಾತ್ರಿ ಗೃಹ ಇಲಾಖೆ ಹಾಗೂ ಕಾರಾಗೃಹ ಇಲಾಖೆಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಗೃಹಸಚಿವರನ್ನು ಭೇಟಿ ಮಾಡಿ, ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯ ಮಾಹಿತಿಯನ್ನು ನೀಡಿದ್ದಾರೆ. ಇದೇ ವೇಳೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ.
6
+ ಇತ್ತ ಪೊಲೀಸ್ ಅಧಿಕಾರಿಗಳು ಜೈಲಿಗೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ಕಳೆದ ವಾರ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಯಲ್ಲಿ ಜೈಲಿಗೆ, ಬುಲೆಟ್, ಗನ್, ಗಾಂಜಾ ಹಾಗೂ ಮೊಬೈಲ್ ಎಗ್ಗಿಲ್ಲದೆ ರವಾನೆಯಾಗುತ್ತಿದೆ ಎಂಬ ಮಾಹಿತಿ ಚರ್ಚೆಯಾಗಿತ್ತು. ಅದರ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆದರೆ ಯಾವುದೇ ಆಕ್ಷೇಪಾರ್ಹ ವಸ್ತುಗಳು ಕಂಡುಬರಲಿಲ್ಲ ಎಂಬ ಮಾಹಿತಿ ಇತ್ತು.
7
+ ಅದಾದ ಬಳಿಕ ಜೈಲಿನಲ್ಲಿ ದರ್ಶನ್ ಅವರ ಐಷರಾಮಿ ಫೋಟೋಗಳು ಬಹಿರಂಗಗೊಂಡಿರುವುದು ಕೆಳಮಟ್ಟದಿಂದ ಮೇಲ್ಪಟ್ಟದವರೆಗೂ ಅಧಿಕಾರಿಗಳು ಶಾಮೀಲಾಗಿರುವ ಆರೋಪಗಳಿಗೆ ಪುಷ್ಟಿ ನೀಡಿವೆ.
8
+ ಸುಧಾರಣೆಗೊಳ್ಳದ ದರ್ಶನ್:ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಎಂಬ ಇಲಾಖೆ ಖೈದಿಗಳನ್ನು ಸುಧಾರಣೆ ಮಾಡುವ ಬದಲಾಗಿ ಮತ್ತಷ್ಟು ಖೂಳರನ್ನಾಗಿ ಮಾಡುತ್ತಿರುವುದು ಕಂಡುಬಂದಿದೆ.
9
+ ನಟರಾಗಿ ತಮದೇ ಆದ ಅಭಿಮಾನಿ ಬಳಗ ಹೊಂದಿರುವ ದರ್ಶನ್ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗನಂತಹ ರೌಡಿಶೀಟರ್ ಜೊತೆ ಆತೀಯವಾಗಿ ಮಾತನಾಡುತ್ತಿರುವುದು ಸುಧಾರಣೆಯ ಬದಲಾಗಿ ಮತ್ತಷ್ಟು ಅನಾಹುತಗಳಿಗೆ ಅವಕಾಶ ಮಾಡಿಕೊಡಬಹುದೇ ಎಂಬ ಆತಂಕ ಸೃಷ್ಟಿಸಿ��ೆ.
10
+ ಸುಧಾರಣಾ ಇಲಾಖೆಯಲ್ಲಿ ಸುಧಾರಣೆ ಸೇವೆಗಳ ಬದಲಿಗೆ ಜೈಲಿನಲ್ಲಿ ಅಸಾಧಾರಣ ಸೇವೆಗಳನ್ನು ನೀಡುವ ಮೂಲಕ ಕೈದಿಗಳಿಗೆ ಮತ್ತಷ್ಟು ಸಮಾಜಘಾತುಕರನ್ನಾಗಿಸಲು ಕುಮುಕ್ಕು ನೀಡಿದಂತೆ ಕಾಣುತ್ತಿದೆ. ಯಾವುದಾದರೂ ಗಂಭೀರ ಆರೋಪಗಳು ಕೇಳಿಬಂದಾಗ ದಾಳಿ, ತಪಾಸಣೆಯಂತಹ ಹೈಡ್ರಾಮಗಳು ನಡೆಯುತ್ತವೆ.
11
+ ಬಳಿಕ ಎಂದಿನಂತೆ ಅಕ್ರಮಗಳು, ಅನೈತಿಕ ಚಟುವಟಿಕೆಗಳಿಗೆ ಜೈಲು ತಾಣವಾಗುತ್ತಿದೆ. ಜೈಲಿನಿಂದಲೇ ಕೊಲೆಗೆ ಸುಫಾರಿ ನೀಡಿರುವಂತಹ ಉದಾರಹಣೆ ಇದೆ ಎಂದು ಹೈಕೋರ್ಟ್ ಮುಂದೆ ವಕೀಲರು ಪ್ರಸ್ತಾಪಿಸಿರುವುದು ಆಘಾತಕಾರಿಯಾಗಿತ್ತು.
12
+ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಳಿಕ ನಟ ದರ್ಶನ್ ಪಶ್ಚಾತ್ತಾಪಕ್ಕೀಡಾಗಿ ಪರಿವರ್ತನೆಗೊಳ್ಳಬಹುದು. ಸುಧಾರಣೆಯಾಗಬಹುದು ಎಂಬ ಅಂದಾಜುಗಳಿದ್ದವು. ಆದರೆ ಅದಕ್ಕೆ ತದ್ವಿರುದ್ಧವಾಗಿ ಕುಳ್ಳ ಸೀನ, ವಿಲ್ಸನ್ಗಾರ್ಡನ್ ನಾಗನಂತಹ ರೌಡಿಶೀಟರ್ಗಳೊಂದಿಗೆ ಕಾಣಿಸಿಕೊಂಡಿರುವುದು ಗಂಭೀರ ಚರ್ಚೆಯನ್ನು ಹುಟ್ಟು ಹಾಕಿದೆ.
eesanje/url_46_33_12.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಹೈಕೋರ್ಟ್ ದಾರಿ ತಪ್ಪಿಸಿದರೇ ಜೈಲು ಅಧಿಕಾರಿಗಳು..?
2
+
3
+ ಬೆಂಗಳೂರು,ಆ.26-ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಪ್ರಕರಣದಲ್ಲಿ ಬಂಧಿಖಾನೆ ಹಾಗೂ ಸುಧಾರಣಾ ಇಲಾಖೆಯ ಅಧಿಕಾರಿಗಳು ರಾಜ್ಯ ಹೈಕೋರ್ಟ್ ದಿಕ್ಕು ತಪ್ಪಿಸಿರುವ ಕುರಿತು ಚರ್ಚೆಗಳಾಗುತ್ತಿವೆ. ದಶನ್ ಅವರು ಜೈಲಿನಲ್ಲಿ ತಮಗೆ ಅಗತ್ಯ ಪೌಷ್ಟಿಕಾಂಶ ಇರುವ ಆಹಾರಗಳು ದೊರೆಯುತ್ತಿಲ್ಲ. ಹೀಗಾಗಿ ಮನೆಯೂಟಕ್ಕೆ ಅವಕಾಶ ಮಾಡಿಕೊಡಬೇಕು. ಬೆಡ್, ಚಮಚ ಹಾಗೂ ಇತರ ಸಣ್ಣಪುಟ್ಟ ಸೌಲಭ್ಯಗಳಿಗಾಗಿ 24ನೇ ಅಡಿಷನಲ್ ಛೀಫ್ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ಅವರ ಮುಂದೆ ಅರ್ಜಿ ಸಲ್ಲಿಸಿದ್ದರು.
4
+ ವಿಚಾರಣೆ ನಡೆಸಿದ ನ್ಯಾಯಾಧೀಶರು 2024ರ ಜುಲೈ 25ರಂದು ದರ್ಶನ್ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜುಲೈ 31ರಂದು ನಡೆದಿದ್ದ ವಿಚಾರಣೆಯಲ್ಲಿ ದರ್ಶನ್ ಪರ ವಕೀಲರು ಅರ್ಜಿಯನ್ನು ಹಿಂಪಡೆದುಕೊಂಡಿದ್ದರು.
5
+ ಆನಂತರ ದರ್ಶನ್ ಸಲ್ಲಿಸಿದ್ದ ಲಿಖಿತ ಮನವಿಯನ್ನು ಜೈಲಿನ ಸೂಪರಿಡೆಂಟ್ಗಳು ಆ.14ರಂದು ತಿರಸ್ಕರಿಸಿದ್ದಾರೆ ಎಂದು ಆ.20ರಂದು ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದ ಎದುರು ನಡೆದ ವಿಚಾರಣೆಯಲ್ಲಿ ಸರ್ಕಾರದ ವಿಶೇಷ ಅಭಿಯೋಜಕರು ತಿಳಿಸಿದರು.
6
+ ದರ್ಶನ್ ಅವರ ಅರ್ಜಿಯನ್ನು ತಿರಸ್ಕರಿಸಿರುವ ಆದೇಶವನ್ನು ಅದೇ ದಿನ ಅರ್ಜಿದಾರರಿಗೆ ತಲುಪಿಸಿರುವುದಾಗಿಯೂ ಹೇಳಿಕೆ ನೀಡಿದ್ದರು. ಈ ವೇಳೆ ಮತ್ತೊಂದು ಪ್ರಕರಣದಲ್ಲಿನ ಮಾಹಿತಿಯನ್ನು ಪ್ರಸ್ತಾಪಿಸಿದ ಬೇರೊಬ್ಬ ವಕೀಲರು ಜೈಲಿನ ಒಳಗೆ ಗಾಂಜಾ, ಬುಲೆಟ್ ಮತ್ತು ಬಂದೂಕುಗಳು ಬರುತ್ತಿವೆ. ಜೈಲಿನಲ್ಲೇ ಸುಫಾರಿ ಚರ್ಚೆಗಳು ನಡೆಯುತ್ತಿವೆ ಎಂದು ನ್ಯಾಯಾಧೀಶರ ಗಮನ ಸೆಳೆದಿದ್ದರು.
7
+ ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಆಹಾರದ ವ್ಯಾಪ್ತಿಯನ್ನು ನೀವು ವಿಸ್ತರಣೆ ಮಾಡಿದ್ದೀರಾ ಎಂದು ಬೇರೊಬ್ಬ ವಕೀಲರಿಗೆ ಲಘು ಹಾಸ್ಯ ಮಿಶ್ರಿತ ದಾಟಿಯಲ್ಲಿ ಹೇಳಿದ್ದರು.
8
+ ಈ ವಿಚಾರಣೆ ವೇಳೆ ಜೈಲಿನ ಅಧಿಕಾರಿಗಳು ದರ್ಶನ್ರ ಅರ್ಜಿಯನ್ನು ತಿರಸ್ಕರಿಸಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಸದರಿ ಆದೇಶವನ್ನು ತಾವು ಪರಿಶೀಲಿಸಲು ಸಮಯ ಬೇಕು ಎಂದು ದರ್ಶನ್ ಪರ ವಕೀಲ ಸಂಜೀವಿನಿ ಪ್ರಭುಲಿಂಗ ನಾವಡಗಿ ಹೇಳಿಕೆ ನೀಡಿದ್ದರು.
9
+ ಈ ಹಿನ್ನಲೆಯಲ್ಲಿ ನ್ಯಾಯಮೂರ್ತಿಗಳು ಕಾಲಾವಕಾಶ ನೀಡಿ ಮುಂದಿನ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದರು. ಹೈಕೋರ್ಟ್ ಮುಂದೆ ದರ್ಶನ್ರವರ ಅರ್ಜಿಯನ್ನು ತಿರಸ್ಕರಿಸಲಾಗಿದೆ, ಯಾವುದೇ ಹೆಚ್ಚುವರಿ ಸೌಲಭ್ಯ ನೀಡಿಲ್ಲ ಎಂದು ಹೇಳಿಕೆ ನೀಡಿದ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಅಧಿಕಾರಿಗಳು ಅನಧಿಕೃತವಾಗಿ ದರ್ಶನ್ಗೆ ರಾಜ್ಯಾತಿಥ್ಯ ನೀಡುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.
10
+ ವಿಚಾರಣೆಯ ಹಂತದಲ್ಲೇ ನ್ಯಾಯಮೂರ್ತಿಗಳು, ಅರ್ಜಿದಾರರು ಆಹಾರ ಕೇಳಿದರೆ ನೀಡುತ್ತಿಲ್ಲ. ಆದರೆ ಗಾಂಜಾ, ಬುಲೆಟ್, ಗನ್ಗ��ು ಸರಬರಾಜಾಗುತ್ತಿವೆ ಎಂಬ ಆರೋಪಗಳಿವೆ. ಇದು ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು.
11
+ ದರ್ಶನ್ ಅವರಿಗೆ ಬಿರಿಯಾನಿ ಸೇರಿದಂತೆ ಪೌಷ್ಟಿಕ ಆಹಾರ ನೀಡಬೇಕಾದರೆ ವೈದ್ಯರ ಸಲಹೆ ಶಿಫಾರಸ್ಸುಗಳ ಅಗತ್ಯವಿದೆ ಎಂದು ಸರ್ಕಾರದ ಪರ ವಕೀಲರು ಹೇಳಿದರು. ನ್ಯಾಯಾಲಯ ಕೂಡ ಜೈಲು ಬಂಧಿಗಳಿಗೂ ಅಗತ್ಯ ಪೋಷ್ಟಿಕಾಂಶದ ಅಗತ್ಯವಿದೆ. ಅದಕ್ಕೆ ಪೂರಕವಾದ ಆಹಾರವನ್ನು ಎಲ್ಲರಿಗೂ ಪೂರೈಸಬೇಕು ಎಂದು ಹೈಕೋರ್ಟ್ನ ನ್ಯಾಯಮೂರ್ತಿಗಳು ಹೇಳಿದ್ದರು.
12
+ ಈಗ ಬಿಡುಗಡೆಯಾಗಿರುವ ಫೋಟೋ ಹಾಗೂ ವಿಡಿಯೋಗಳಲ್ಲಿ ದರ್ಶನ್ ರೌಡಿಶೀಟರ್ಗಳಾದ ವಿಲ್ಸನ್ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ತಮ ಆಪ್ತ ಸಹಾಯಕ ನಾಗರಾಜು ಅವರೊಂದಿಗೆ ಚೇರಿನಲ್ಲಿ ಕುಳಿತು ಮಗ್ನಲ್ಲಿ ಟೀ ಕುಡಿಯುತ್ತಾ, ಸಿಗರೇಟ್ ಕೈಯಲ್ಲಿ ಹಿಡಿದುಕೊಂಡು ಲೋಕಾಭಿರಾಮವಾಗಿ ಮಾತನಾಡುತ್ತಿರುವುದು ಕಂಡುಬಂದಿದೆ.
13
+ ಜೊತೆಗೆ ಜೈಲಿನಲ್ಲಿರುವ ರೌಡಿಶೀಟರ್ವೊಬ್ಬ ಹೊರಗಿರುವ ತಮ ಪುತ್ರನಿಗೆ ವಿಡಿಯೋ ಕಾಲ್ ಮಾಡಿದ್ದು, ಅದರಲ್ಲಿ ದರ್ಶನ್ ತಮ ಮುಖ ತೋರಿಸಿ ವಿಶ್ ಮಾಡಿರುವುದು ಕಂಡುಬಂದಿದೆ. ದರ್ಶನ್ ಜೈಲಿನಲ್ಲಿ ಏಕಾಂಗಿಯಾಗಿದ್ದಾರೆ, ಪೌಷ್ಟಿಕ ಆಹಾರವಿಲ್ಲದೆ ಸೊರಗಿ ಸಣ್ಣಗಾಗಿದ್ದಾರೆ ಎಂದೆಲ್ಲ ವದಂತಿಗಳನ್ನು ಹರಿಯಬಿಡಲಾಗಿತ್ತು. ಈಗ ಬಿಡುಗಡೆಯಾಗಿರುವ ಫೋಟೋಗಳು ಅದೆಲ್ಲವನ್ನೂ ಸುಳ್ಳು ಎಂದು ತೋರಿಸಿದಂತಿದೆ.
eesanje/url_46_33_2.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಜೈಲಲ್ಲಿ ರಾಜಾತೀಥ್ಯ ಪ್ರಕರಣ : 3 ಪ್ರಕರಣಗಳ ತನಿಖೆಗಾಗಿ 5 ವಿಶೇಷ ತಂಡ ರಚನೆ
2
+ 3 , 9
3
+ ಬೆಂಗಳೂರು, ಆ.27-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌ ಹಾಗೂ ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್‌ ನಾಗ ಮತ್ತು ಇತರರಿಗೆ ರಾಜಾತೀಥ್ಯ ನೀಡಿರುವ ವಿಚಾರವಾಗಿ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಗಾಗಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ.
4
+ ಈ ಐದು ತಂಡಗಳು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ಅವರ ನೇತೃತ್ವದಲ್ಲಿ ಈಗಾಗಲೇ ತನಿಖೆ ಆರಂಭಿಸಿವೆ.ಒಂದನೇ ಪ್ರಕರಣದಲ್ಲಿ ದರ್ಶನ್‌, ನಾಗರಾಜ ಹಾಗೂ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಕುಳ್ಳ ಸೀನನ ಮೇಲೆ ಎಫ್‌ಐಆರ್‌ ದಾಖಲಾಗಿದೆ.
5
+ ಈ ಪ್ರಕರಣದ ತನಿಖೆಯನ್ನು ಬೇಗೂರು ಠಾಣೆ ಇನ್ಸ್ ಪೆಕ್ಟರ್‌ ನೇತೃತ್ವದಲ್ಲಿ ನಡೆಸುತ್ತಿದ್ದು, ಜೈಲಿನ ಲಾನ್‌ನಲ್ಲಿ ಕುಳಿತು ಸಿಗರೇಟ್‌ ಸೇವನೆ, ನಟ ದರ್ಶನ್‌ಗೆ ರೌಡಿಗಳ ಜೊತೆ ಸಂಪರ್ಕ ಹೇಗೆ ಆಯ್ತು, ಲಾನ್‌ನಲ್ಲಿ ಒಟ್ಟಿಗೆ ಕುಳಿತುಕೊಳ್ಳಲು ಇವರಿಗೆ ಚೇರ್‌, ಟೀಪಾಯಿ ವ್ಯವಸ್ಥೆ ಮಾಡಿದವರ್ಯಾರು, ಕಾಫಿ ತಂದು ಕೊಟ್ಟವರ್ಯಾರು, ಜೈಲಿನಲ್ಲಿ ಸಿಗರೇಟ್‌ ನಿಷೇಧವಿದ್ದರೂ ಒಳಗೆ ಹೇಗೆ ಬಂತು ಎಂಬಿತ್ಯಾದಿ ಬಗ್ಗೆ ಮಾಹಿತಿಗಳನ್ನು ತನಿಖಾ ತಂಡ ಕಲೆಹಾಕುತ್ತಿದೆ.
6
+ ಎರಡನೇ ಪ್ರಕರಣದಲ್ಲಿ ದರ್ಶನ್‌, ಧರ್ಮ ಮತ್ತು ಸತ್ಯನ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ಹುಳಿಮಾವು ಠಾಣೆ ಇನ್ಸ್ ಪೆಕ್ಟರ್‌ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮೊಬೈಲ್‌ ಫೋನ್‌ನಲ್ಲಿ ದರ್ಶನ್‌ ರೌಡಿಯ ಮಗನಿಗೆ ವಿಡಿಯೋ ಕಾಲ್‌ ಮಾಡಿರುವ ಬಗ್ಗೆ, ಅದು ವೈರಲ್‌ ಆಗಿರುವ ಫೋಟೋ ತೆಗೆದವರ್ಯಾರು, ಜೈಲಿನಲ್ಲಿ ಮೊಬೈಲ್‌ ನಿಷೇಧವಿದ್ದರೂ ಆರೋಪಿಗಳ ಕೈಗೆ ಮೊಬೈಲ್‌ ಸಿಕ್ಕಿದ್ದಾದರೂ ಹೇಗೆ, ಅದನ್ನು ಒದಗಿಸಿದವರ್ಯಾರು, ಜೈಲಿನ ಸುತ್ತ ಜಾಮರ್‌ ಅಳವಡಿಸಿದ್ದರೂ ಇಂಟರ್‌ನೆಟ್‌ ಕನೆಕ್ಷನ್‌ ಸಿಕ್ಕಿದ್ದಾದರೂ ಹೇಗೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
7
+ ಮೂರನೇ ಪ್ರಕರಣದಲ್ಲಿ ಜೈಲಿನ ನಾಲ್ಕು ಮಂದಿ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಜೈಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಲೋಪದ ವಿರುದ್ಧ ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಎಸಿಪಿ ಅವರು ತನಿಖೆ ನಡೆಸುತ್ತಿದ್ದಾರೆ.
8
+ ಉಳಿದ ಎರಡು ತಂಡಗಳಲ್ಲಿ ಒಂದು ತಂಡ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ ನಂತರ ಅವರನ್ನು ಯಾರ್ಯಾರು ಇದುವರೆಗೂ ಭೇಟಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಉಳಿದ ಆರೋಪಿಗಳನ್ನು ಯಾರು ಭೇಟಿ ಮಾಡಿದ್ದಾರೆಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ.
9
+ ಐದನೇ ತಂಡ ಜೈಲಿನ ಒಳಗಡೆ ಹಾಗೂ ಹೊರಗಡೆ ಅಳವಡಿಸಿರುವ ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದೆ. ಒಟ್ಟಾರೆ ಈ ಪ್ರಕರಣದಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್���ಗಳ ತನಿಖೆಗಾಗಿ ಐದು ತಂಡಗಳು ಕಾರ್ಯಾಚರಣೆಗಿಳಿದಿದ್ದು, ಮತ್ತಷ್ಟು ಮಾಹಿತಿಗಳನ್ನು ಕಲೆಹಾಕಿ ವರದಿ ನೀಡಲಿವೆ.
10
+ ಜೈಲಿನೊಳಗೆ ಸಿಗರೇಟ್‌ ಇನ್ನಿತರ ವಸ್ತುಗಳನ್ನು ಸರಬರಾಜು ಮಾಡಿದವರ್ಯಾರು ಹಾಗೂ ವಿಲ್ಸನ್‌ಗಾರ್ಡನ್‌ ನಾಗನಿಗೆ ರಾಜಾತೀಥ್ಯ ವ್ಯವಸ್ಥೆ ಮಾಡಿಕೊಟ್ಟವರ್ಯಾರು ಎಂಬ ಬಗ್ಗೆಯೂ ಹೆಚ್ಚಿನ ಮಾಹಿತಿಗಳನ್ನು ತನಿಖಾ ತಂಡಗಳು ಸಂಗ್ರಹಿಸುತ್ತಿದ್ದು, ತನಿಖೆ ವೇಳೆ ಎಲ್ಲಿ ಕರ್ತವ್ಯ ಲೋಪವಾಗಿದೆ ಎಂಬುವುದು ಗೊತ್ತಾಗಲಿವೆ.
11
+ ನಟ ದರ್ಶನ್‌ ಜೈಲಿನೊಳಗೆ ಇನ್ನಿತರರೊಂದಿಗೆ ಒಟ್ಟಿಗೆ ಕುಳಿತು ಕಾಫಿ ಹಾಗೂ ಸಿಗರೇಟ್‌ ಹಿಡಿದುಕೊಂಡಿರುವ ಫೋಟೋ ವೈರಲ್‌ ಆಗುತ್ತಿದ್ದಂತೆ ಜೈಲಿನ ಒಂಭತ್ತು ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಗಳ ತಲೆದಂಡವಾಗಿದ್ದು, ಉಳಿದ ಜೈಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಭಯ ಶುರುವಾಗಿದೆ.
eesanje/url_46_33_3.txt ADDED
@@ -0,0 +1,8 @@
 
 
 
 
 
 
 
 
 
1
+ ಹೈಟೆಕ್ ಸರ್ಕಾವೆಂದರೆ ಇದೇ ಇರಬೇಕು : ಎಚ್ಡಿಕೆ ವ್ಯಂಗ್ಯ
2
+
3
+ ಬೆಂಗಳೂರು, ಆ.26-ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಕೊಡುತ್ತಿರುವುದೇ ಹೈಟೆಕ್ ಸರ್ಕಾರದ ಆಡಳಿತ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ದಿಶಾ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮದು ಹೈಟೆಕ್ ಸರ್ಕಾರ ಎಂದು ಕಾಂಗ್ರೆಸ್ನವರು ಹೇಳುತ್ತಾರೆ.
4
+ ಹೈಟೆಕ್ ಸರ್ಕಾವೆಂದರೆ ಇದೇ ಇರಬೇಕು ಎಂದು ಟೀಕಿಸಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ಖೈದಿಗಳಿಗೆ ಪಂಚತಾರ ವ್ಯವಸ್ಥೆ ಇದೆ. ಈಗ ನಟ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ ಅಷ್ಟೆ. ಸರ್ಕಾರ ಆ ಖೈದಿಗಳನ್ನು ಬೇರೆ ಕಡೆಗೆ ವರ್ಗಾಯಿಸಬೇಕು ಎಂದು ತೀರ್ಮಾನ ಮಾಡುತ್ತಿದೆಯಂತೆ. ಈ ಸರ್ಕಾರದ ಬಗ್ಗೆ ಜನರಿಗೆ ನಂಬಿಕೆ ಬರಲು ಸಾಧ್ಯ ಇಲ್ಲ ಎಂದು ಅವರು ಹೇಳಿದ್ದಾರೆ.
5
+ ರಾಜ್ಯ ಸರ್ಕಾರ ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳಲು ಡೈವರ್ಟ್ ಮಾಡುತ್ತಿದ್ದಾರೆ. ಕೆಲವು ವಿಷಯಗಳನ್ನು ಮುನ್ನೆಲೆಗೆ ತಂದು ಜನರನ್ನು ಯಾಮಾರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
6
+ ಅಧಿಕಾರಿಗಳಿಂದ ನ್ಯಾಯ ದೊರಕುವುದಿಲ್ಲ. ನ್ಯಾಯಾಲಯದಿಂದ ಮಾತ್ರ ನ್ಯಾಯ ದೊರಬೇಕು. ಇದಕ್ಕೆ ಸರ್ಕಾರವೇ ಹೊಣೆ ಆಗಬೇಕು ಎಂದು ಆಗ್ರಹಿಸಿರು ಅವರು, ಜೈಲಿನ ವ್ಯವಸ್ಥೆ ಹೊಸದಾಗಿ ಆಗಿಲ್ಲ, ಹಿಂದಿನಿಂದಲೂ ನಡೆಯುತ್ತಿದೆ. ಈ ಹಿಂದೆ ಡಿಜಿ ಮತ್ತು ಡಿಸಿಪಿ ನಡುವೆ ತನಿಖೆ ನಡೆಯಬೇಕು ಎಂದು ದೊಡ್ಡ ಗಲಾಟೆ ಆಗಿತ್ತು ಎಂದು ಅವರು ಹೇಳಿದ್ದಾರೆ.
7
+ ರಾಜ್ಯದಲ್ಲಿ ಸರ್ಕಾರವೇ ಇಲ್ಲ.ರಾಜ್ಯದಲ್ಲಿ ಆಡಳಿತ ಎನ್ನುವ ನಡವಳಿಕೆ ಇಲ್ಲ. ಭ್ರಷ್ಟಾಚಾರದ ಬಗ್ಗೆ ಬೀದಿ ಬೀದಿಯಲ್ಲಿ ಮಾತಾಡಿಕೊಂಡು ಇರುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಮಂತ್ರಿಗಳಿಗೆ ಕೆಲಸವಿಲ್ಲ. ಮುಖ್ಯಮಂತ್ರಿಗೆ ಅವರ ಹಗರಣ ಬಗ್ಗೆ ಮಾತಾಡಲು ಸಮಯ ಸಾಕಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ.
8
+ ದುಡ್ಡು ಇದ್ದವರು ಏನು ಬೇಕಾದರೂ ಕೊಂಡುಕೊಳ್ಳಬಹುದು. ಮೃತ ರೇಣುಕಾಸ್ವಾಮಿ ಕುಟುಂಬಸ್ಥರು ಅವರ ನೋವು ಹೇಳಿಕೊಳ್ಳುತ್ತಾರೆ. ಗೃಹ ಸಚಿವ ಡಾ. ಪರಮೇಶ್ವರ ಅವರು ಪ್ರತಿ ದಿನ ಒಂದೊಂದು ಕಥೆ ಹೇಳುತ್ತಾರೆ. ಪಾರದರ್ಶಕವಾದ ಸರ್ಕಾರ ಮಾಡುತ್ತಿದ್ದೇವೆ ಎನ್ನುತ್ತಾರೆ. ಆದರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ.
eesanje/url_46_33_4.txt ADDED
@@ -0,0 +1,9 @@
 
 
 
 
 
 
 
 
 
 
1
+ ಪರಪ್ಪನ ಅಗ್ರಹಾರ ಜೈಲಿಗೆ ಜಾಮರ್, ಸುತ್ತ ಮುತ್ತಲಿನ ನಿವಾಸಿಗಳಿಗೆ ಕಿರಿಕಿರಿ
2
+
3
+ ಬೆಂಗಳೂರು,ಆ.26-ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್ನಿಂದಾಗಿ ಸುತ್ತಮುತ್ತಲಿನ ನಿವಾಸಿಗಳಿಗೆ ಮೊಬೈಲ್ ಸಂಪರ್ಕಗಳೇ ದುಸ್ತರವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಥಳೀಯ ನಿವಾಸಿ ಲಕ್ಷ್ಮಣ್ ಎಂಬುವರು, ಜೈಲಿನ ಒಳಗೆ ಮೊಬೈಲ್ಗಳು ಬಳಕೆಯಾಗುತ್ತಿವೆ. ದರ್ಶನ್ ಅವರು ವಿಡಿಯೋ ಕಾಲ್ ಮೂಲಕ ಹೊರಗಿನವರೊಂದಿಗೆ ಮಾತನಾಡಿದ್ದಾರೆ. ಆದರೆ ಸುತ್ತಮುತ್ತಲಿನವರಿಗೆ ಮೊಬೈಲ್ ಸಂಪರ್ಕವೇ ಸಿಗದೆ ಸಮಸ್ಯೆಯಾಗುತ್ತಿದೆ ಎಂದರು.
5
+ ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್ ಗೆ ಕರೆ ಮಾಡಲಾಗುತ್ತಿಲ್ಲ, ಕ್ಯಾಬ್ ಬುಕ್ ಮಾಡಲಾಗುತ್ತಿಲ್ಲ, ಮಕ್ಕಳು ಶಾಲೆಯಿಂದ ಬಂದರೋ, ಇಲ್ಲವೋ ಎಂಬುದನ್ನು ತಿಳಿದು ಕೊಳ್ಳಲೂ ಮೊಬೈಲ್ ಸಂಪರ್ಕವಿಲ್ಲದೆ ಕಷ್ಟವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದರು.
6
+ ಜೈಲಿನಲ್ಲಿ ಅಳವಡಿಸಲಾಗಿರುವ ಜಾಮರ್ ಫ್ರೀಕ್ವೆನ್ಸಿಯನ್ನು ಕಡಿಮೆ ಮಾಡುವಂತೆ ಮೂರ್ನಾಲ್ಕು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಹಿರಿಯ ಅಧಿಕಾರಿಗಳಿಗೆ, ಜೈಲಿನ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದೇವೆ. ಆದರೆ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
7
+ ಜಾಮರ್ನಿಂದಾಗಿ ಸುತ್ತಮುತ್ತಲಿನ ಜನರಿಗೆ ತೀವ್ರ ತೊಂದರೆಯಾಗುತ್ತಿದೆ. ಆದರೆ ಜೈಲಿನ ಒಳಗಿರುವ ದರ್ಶನ್ಗೆ ವಿಡಿಯೋ ಕಾಲ್ ಸೇರಿದಂತೆ ಎಲ್ಲ ಸಂಪರ್ಕಗಳು ಸುಲಲಿತವಾಗಿದೆ. ಇದು ಜೈಲಿನ ಅಧಿಕಾರಿಗಳ ಕಳ್ಳಾಟಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದರು.
8
+ ಸ್ಥಳೀಯರ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದೆ. ಗೃಹಸಚಿವರು, ಮುಖ್ಯಮಂತ್ರಿ ಯವರು ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು. ದುಡ್ಡಿದ್ದರೆ ಜೈಲಿನಲ್ಲಿ ರೆಸಾರ್ಟ್ನಲ್ಲಿದ್ದಂತೆ ಆರಾಮಾಗಿ ಇರಬಹುದು.
9
+ ಇದು ಎಲ್ಲರಿಗೂ ಗೊತ್ತು ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದೂರಿದರು. ಜೈಲಿನ ಹೊರಗೆ ಜಾಮರ್ ಹಾಕಿ ಜನರನ್ನು ನಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜೈಲಿನ ಒಳಗೆ ಯಾವುದೇ ಅಡೆತಡೆ ಇಲ್ಲದಂತೆ ಮೊಬೈಲ್ ಬಳಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಕಿಡಿಕಾರಿದರು.
eesanje/url_46_33_5.txt ADDED
@@ -0,0 +1,6 @@
 
 
 
 
 
 
 
1
+ ಪರಪ್ಪನ ಅಗ್ರಹಾರ ಜೈಲಿಂದ ವಿಲ್ಸನ್ ಗಾರ್ಡನ್ ನಾಗನ ಸ್ಥಳಾಂತರಕ್ಕೆ ಪತ್ರ : ದಯಾನಂದ
2
+
3
+ ಬೆಂಗಳೂರು,ಆ.26-ರೌಡಿ ವಿಲ್ಸನ್ಗಾರ್ಡನ್ ನಾಗನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಸ್ಥಳಾಂತರಿಸುವಂತೆ ಈಗಾಗಲೇ ಕಾರಾಗೃಹಗಳ ಡಿಜಿಪಿಯವರಿಗೆ ಪತ್ರ ಬರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು.
4
+ ಈ ಸಂಜೆಯೊಂದಿಗೆ ಮಾತನಾಡಿದ ಅವರು, ವಿಲ್ಸನ್ಗಾರ್ಡನ್ ನಾಗ ಹಾಗೂ ಆತನ ಸಹಚರರ ಚಲನವಲನಗಳ ಬಗ್ಗೆ ನಾವು ನಿಗಾ ವಹಿಸುತ್ತಿದ್ದೇವೆ. ದರ್ಶನ್ ಜೊತೆ ವಿಲ್ಸನ್ಗಾರ್ಡನ್ ನಾಗನ ಸ್ನೇಹ ಹೇಗೆ ಬೆಳೆಯಿತು? ಈ ರೀತಿ ರಾಜಾತಿಥ್ಯ ನೀಡಿದವರ್ಯಾರು? ಎಂಬುದನ್ನು ಕಾರಾಗೃಹ ಗಳ ಇಲಾಖೆ ಈಗಾಗಲೇ ತನಿಖೆ ಆರಂಭಿಸಿದೆ ಎಂದರು.
5
+ ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಏಳು ಮಂದಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಕಳೆದ ಶನಿವಾರವಷ್ಟೇ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆ ಸಂದರ್ಭದಲ್ಲಿ ಮೊಬೈಲಾಗಲೀ, ಮಾದಕ ವಸ್ತುವಾಗಲೀ ಏನೂ ಸಿಕ್ಕಿರಲಿಲ್ಲ.
6
+ ನಮ ಪೊಲೀಸರು ಆಗಾಗ್ಗೆ ಈ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುತ್ತಾರೆ. ಮುಂದಿನ ದಿನಗಳಲ್ಲೂ ಅನಿರೀಕ್ಷಿತ ದಾಳಿ ನಡೆಯಲಿದೆ ಎಂದು ಅವರು ಹೇಳಿದರು.
eesanje/url_46_33_6.txt ADDED
@@ -0,0 +1,5 @@
 
 
 
 
 
 
1
+ ವಿಡಿಯೋ ಕಾಲ್‌ನಲ್ಲಿ ದರ್ಶನ್ ಜೊತೆ ಮಾತಾಡಿದ್ದು ರೌಡಿಯ ಮಗ
2
+
3
+ ಬೆಂಗಳೂರು,ಆ.26-ಜೈಲಿನಿಂದ ದರ್ಶನ್ ವಿಡಿಯೊ ಕಾಲ್ ಮಾಡಿ ಮಾತನಾಡಿರುವ ವ್ಯಕ್ತಿ ನಗರದ ಹೊರವಲಯದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ, ರೌಡಿಶೀಟರ್ ಮಗ ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
4
+ ರೌಡಿಶೀಟರ್ ಮಗನಿಗೆ ವಿಡಿಯೊ ಕಾಲ್ ಮಾಡಿರುವ ದರ್ಶನ್, ಹಾಯ್ ಚಿನ್ನ, ಊಟ ಆಯ್ತಾ ಎಂದು ಕುಶಲೋಪರಿ ವಿಚಾರಿಸಿ ಮಾತನಾಡಿರುವ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ.ಇದನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
5
+ ರೌಡಿಯ ಮಗನಿಗೆ ವಿಡಿಯೊ ಕಾಲ್ ಮಾಡಲು ದರ್ಶನ್ಗೆ ಸಾರ್ಟ್ಫೋನ್ ಕೊಟ್ಟವರ್ಯಾರು? ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ. ರೌಡಿ ಮಗನಿಗೂ, ದರ್ಶನ್ಗೂ ಯಾವ ರೀತಿಯ ಸಂಬಂಧವಿದೆ ಎಂಬುದನ್ನು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
eesanje/url_46_33_7.txt ADDED
@@ -0,0 +1,7 @@
 
 
 
 
 
 
 
 
1
+ ಕಾರಾಗೃಹ ಅಧಿಕಾರಿ, ಸಿಬ್ಬಂದಿಗೆ ಡಿಜಿಪಿ ತರಾಟೆ
2
+ ಬೆಂಗಳೂರು,ಆ.26-ಕೊಲೆ ಆರೋಪಿ ನಟ ದರ್ಶನ್ ಹಾಗೂ ಕುಖ್ಯಾತ ರೌಡಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಾರಾಗೃಹಗಳು ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತರಾಟೆಗೆ ತೆಗೆದುಕೊಂಡಿದ್ದಾರೆ.
3
+ ಇಂದು ಬೆಳಿಗ್ಗೆ ಕಾರಾಗೃಹಕ್ಕೆ ಭೇಟಿ ನೀಡಿದ ಅವರು, ನೀವು ಮಾಡುವಂತಹ ಇಂತಹ ಕೆಲಸಗಳಿಂದ ಹಿರಿಯ ಅಧಿಕಾರಿಗಳು ತಲೆ ತಗ್ಗಿಸಬೇಕಾಗುತ್ತದೆ. ಈ ಘಟನೆಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
4
+ ಈ ಘಟನೆಯಲ್ಲದೆ ಬೇರೆ ಖೆೈದಿ ಅಥವಾ ವಿಚಾರಣಾ ಖೆೈದಿಗಳಿಗೆ ಈ ರೀತಿಯ ರಾಜಾತಿಥ್ಯ ನೀಡಲಾಗಿದೆಯೇ?, ಬೇರೆ ಇನ್ನೇನಾದರೂ ಸವಲತ್ತು ಒದಗಿಸಲಾಗಿದೆಯೇ?, ಒಂದು ವೇಳೆ ಆ ರೀತಿಯ ಸೌಲಭ್ಯಗಳನ್ನು ಕೊಡುತ್ತಿದ್ದರೆ ತಕ್ಷಣ ನಿಲ್ಲಿಸಿ, ಇಲ್ಲದಿದ್ದರೆ ನಿಮ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
5
+ ಪ್ರತಿ ಸಭೆಯಲ್ಲೂ ಸಹ ನಾವು ಪದೇಪದೇ ಜೈಲಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿಗಳಿಗೆ ತಿಳಿಸಿದ್ದೇವೆ. ಆದರೂ ಸಹ ಇಂತಹ ಕೆಲಸ ಮಾಡುತ್ತೀರಿ. ಯಾರು, ಎಷ್ಟೇ ದೊಡ್ಡವರಾದರೂ ಅವರಿಗೆ ಯಾವುದೇ ರೀತಿಯ ಹೆಚ್ಚಿನ ಸವಲತ್ತು ನೀಡಬಾರದು. ಜೈಲಿನ ನಿಯಮಾವಳಿ ಪ್ರಕಾರವೇ ಅವರಿಗೆ ಸೌಲಭ್ಯ ಒದಗಿಸಬೇಕು. ಅದಕ್ಕಿಂತ ಹೆಚ್ಚಿಗೆ ಒದಗಿಸಬಾರದು. ಅದು ಕಾನೂನು ಬಾಹಿರ ಎಂದರು.
6
+ ದರ್ಶನ್ಗೆ ಈ ವ್ಯವಸ್ಥೆ ಮಾಡಿಕೊಟ್ಟವರ್ಯಾರು? ಕುಖ್ಯಾತ ರೌಡಿಗಳ ಸಂಪರ್ಕ ದರ್ಶನ್ಗೆ ಕಲ್ಪಿಸಿದವರ್ಯಾರು? ದರ್ಶನ್ ಜೊತೆಯಲ್ಲಿ ಕುಳಿತುಕೊಳ್ಳಲು ಹಾಗೂ ಅವರಿಗೆ ಚೇರು, ಟೀಫಾಯಿ ವ್ಯವಸ್ಥೆ ಮಾಡಿದವರ್ಯಾರು? ಇದು ಎಷ್ಟು ದಿನದಿಂದ ನಡೆಯುತ್ತಿದೆ? ಇದರ ಹಿಂದೆ ಯಾರ್ಯಾರಿರಿದ್ದಾರೆ? ಇದಕ್ಕಾಗಿ ಎಷ್ಟು ಹಣ ಪಡೆದುಕೊಂಡಿದ್ದೀರಿ? ಬೇಗ ತಿಳಿಸಿ ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಡಿಜಿಪಿಯವರು ತರಾಟೆಗೆ ತೆಗೆದುಕೊಂಡರು.
7
+ ಇದಕ್ಕೂ ಮುನ್ನ ಡಿಜಿಪಿಯವರು ಜೈಲಿನ ಎಲ್ಲಾ ಬ್ಯಾರಕ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಎಐಜಿಪಿ ಆನಂದರೆಡ್ಡಿ, ಡಿಐಜಿ ಸೋಮಶೇಖರ್ ಹಾಗೂ ಇನ್ನಿತರ ಅಧಿಕಾರಿಗಳು ಜೊತೆಗಿದ್ದರು.
eesanje/url_46_33_8.txt ADDED
@@ -0,0 +1,9 @@
 
 
 
 
 
 
 
 
 
 
1
+ ನಟ ದರ್ಶನ್ ಸ್ಥಳಾಂತರ ಕುರಿತು ಪರಿಶೀಲನೆ : ಸಿಎಂ
2
+ ,
3
+ ಬೆಳಗಾವಿ,ಆ.26– ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಬೆಳಗಾವಿ ಅಥವಾ ಬೇರೆ ಜೈಲಿಗೆ ಸ್ಥಳಾಂತರಿಸುವ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
4
+ ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಕರಣದಲ್ಲಿ ಪರ-ವಿರೋಧ ಎಂಬ ಚರ್ಚೆಯಿಲ್ಲ. ಅಧಿಕಾರಿಗಳ ಕಡೆಯಿಂದ ಲೋಪಗಳಾಗಿವೆ. ಏಳು ಜನರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ ಎಂದರು.
5
+ ಗೃಹಸಚಿವರಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇದಕ್ಕೆ ಅವಕಾಶ ಮಾಡಿಕೊಟ್ಟಿರುವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಮತ್ತಷ್ಟು ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು ಎಂದು ಹೇಳಿದರು.
6
+ ದರ್ಶನ್ನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಚಿಂತನೆ ಇದೆ. ಅಧಿಕಾರಿಗಳು ಹಣ ಪಡೆದು ಸೌಲಭ್ಯ ಒದಗಿಸಿದ್ದಾರೋ ಏನೋ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರೆ ಅವರನ್ನೂ ಅಮಾನತುಗೊಳಿಸಲು ಗೃಹಸಚಿವರು ವರದಿ ಪಡೆಯುತ್ತಿದ್ದಾರೆ.
7
+ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುವ ನೈತಿಕತೆ ಹೊಂದಿಲ್ಲ. ಅವರು ಬಡವರ ಪರವಾಗಿದ್ದಾರೋ, ಶ್ರೀಮಂತರ ಪರವಾಗಿದ್ದಾರೋ ಎಂಬುದನ್ನು ಸ್ಪಷ್ಟಪಡಿಸಬೇಕು. ನಮ ಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರ ಪರವಾಗಿದೆ. ಪ್ರಹ್ಲಾದ್ ಜೋಷಿ ಬಡವರ ಪರವಾಗಿ ಏನು ಕಾರ್ಯಕ್ರಮ ರೂಪಿಸಿದ್ದಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ಎಂದು ಇದೇ ವೇಳೆ ಸವಾಲು ಹಾಕಿದರು.
8
+ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಕೊಲೆಯಾದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಗೃಹಸಚಿವರು ಇಂದು ಜೈಲಿಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿಂದ ಅವರು ಪಡೆಯುವ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.
9
+ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ವ್ಯವಸ್ಥೆಯ ಬದಲಾಗಿ ಹಳೇ ಪಿಂಚಣಿಯನ್ನೇ ಮರುಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಹಾಗೆಯೇ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಕುರಿತಂತೆ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದರು.
eesanje/url_46_33_9.txt ADDED
@@ -0,0 +1,7 @@
 
 
 
 
 
 
 
 
1
+ 100 ಕೋಟಿ ರೂ. ಆಫರ್ ಹೇಳಿಕೆ : ಗಣಿಗ ರವಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
2
+ 100 . :
3
+ ಬೆಂಗಳೂರು,ಆ.26– ಬಿಜೆಪಿ ಸೇರಲು ಶಾಸಕರಿಗೆ 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂಬ ಮಂಡ್ಯ ಶಾಸಕ ಗಣಿಗ ರವಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಬಿಜೆಪಿ ದೂರು ನೀಡಿದೆ.
4
+ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ದೂರು ನೀಡಿದ ಜಿಲ್ಲಾ ಘಟಕ ಪಕ್ಷದ ವಿರುದ್ಧ ಮಾನಹಾನಿ ಹೇಳಿಕೆ ನೀಡಿರುವ ಶಾಸಕ ಗಣಿಗಾ ರವಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದೆ.
5
+ ಗಣಿಗಾ ರವಿ ಅವರನ್ನು ಯಾರು? ಎಲ್ಲಿ? ಯಾವಾಗ? ಭೇಟಿ ಮಾಡಿದರು. ಅವರಿಗೆ 100 ಕೋಟಿ ರೂ. ಆಫರ್ ನೀಡಿರುವುದಕ್ಕೆ ದಾಖಲೆಯಿದೆಯೇ?, ಇದ್ದರೆ ಅದನ್ನು ಏಕೆ ಬಿಡುಗಡೆ ಮಾಡಬಾರದು?, ಸುಳ್ಳು ಆರೋಪ ಮಾಡಿರುವ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
6
+ ಈ ಹಿಂದೆಯೂ ಇದೇ ರೀತಿ ಸುಳ್ಳು ಆರೋಪಗಳನ್ನು ಮಾಡುತ್ತಾ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿರುವ ಅವರ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಈ ಹೇಳಿಕೆಯಿಂದ ಬಿಜೆಪಿಗೆ ಸಾಕಷ್ಟು ಮುಜುಗರವಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ.
7
+ ಕೇವಲ ಪ್ರಚಾರಕ್ಕೋಸ್ಕರ ಸುಳ್ಳು ಆರೋಪಗಳನ್ನು ಮಾಡಿರುವ ಗಣಿಗಾ ರವಿ ಕೂಡಲೇ ಕ್ಷಮಾಪಣೆ ಕೇಳಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
eesanje/url_46_340_1.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕಾವೇರಿ ವಿಚಾರದಲ್ಲಿ ಸರ್ಕಾರಗಳು ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು : ಶಿವಣ್ಣ
2
+ ಬೆಂಗಳೂರು, ಸೆ.29- ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಲ್ಲಿ ಚರ್ಚೆ ಮಾಡಿ ಕಾವೇರಿ ನದಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹೇಳಿದರು.
3
+ ಕರ್ನಾಟಕ ಬಂದ್ ಪ್ರಯುಕ್ತ ಕನ್ನಡ ಚಲನಚಿತ್ರವಾಣಿಜ್ಯ ಮಂಡಳಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾವೇರಿ ತಾಯಿ ಇಲ್ಲಿಯೂ ಇರಬೇಕು, ಅಲ್ಲಿಗೂ ಹೋಗಬೇಕು. ಅದಕ್ಕೆ ತಾಯಿಯನ್ನು ದೇವರು ಎನ್ನುತ್ತೇವೆ. ಆಕೆ ಎಲ್ಲ ನೋವನ್ನು ತಡೆದುಕೊಳ್ಳುತ್ತಾಳೆ. ಆ ಶಕ್ತಿ ಆಕೆಗಿದೆ ಎಂದರು.
4
+ ಕಾವೇರಿ ಹೋರಾಟಕ್ಕೆ ಚಿತ್ರರಂಗದ ಕಲಾವಿದರು ಬಂದಿಲ್ಲ ಎಂದು ಪ್ರಶ್ನೆ ಮಾಡಲಾಗುತ್ತಿದೆ. ನಾವು ಬಂದು ಏನು ಮಾಡುವುದು. ನಾವು ನಿಮ್ಮಂತೆ ಮನುಷ್ಯರು, ಪ್ರತಿಭಟನೆಗೆ ಬಂದು ನಿಂತುಕೊಳ್ಳಬಹುದಷ್ಟೆ. ನಮಗೆ ಸ್ಟಾರ್ಡಂ ಕೊಟ್ಟಿರುವುದೇ ನೀವು, ಬೇಕಿದ್ದರೆ ಅದನ್ನು ವಾಪಾಸ್ ಕಿತ್ತುಕೊಳ್ಳಿ ಎಂದು ಪರೋಕ್ಷ ಅಸಮಧಾನ ವ್ಯಕ್ತಪಡಿಸಿದರು.
5
+ ಅಲ್ಲಿ ಮತ್ತು ಇಲ್ಲಿ ಇರುವ ಎರಡೂ ಸರ್ಕಾರಗಳು ಕುಳಿತು ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಅಲ್ಲಿ ಮತ್ತು ಇಲ್ಲಿನ ರೈತರು ಒಂದೇ, ಸಮಸ್ಯೆ ಯಾರಿಗೆ ಆದರೂ ಅದು ನೋವೆ ತಾನೆ. ಚುನಾಯಿತ ಸರ್ಕಾರಗಳು ಕುಳಿತು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
6
+ ಕಾವೇರಿಗಾಗಿ ಕೆರಳಿದ ಚಿತ್ರರಂಗ, ಒಂದಾಗಿ ಹೋರಾಟಕ್ಕಿಳಿದ ತಾರೆಯರು
7
+ ಮೊನ್ನೆ ತಮಿಳುನಾಡಿನ ನಟ ಸಿದ್ಧಾರ್ಥ್ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವುದಕ್ಕೆ ಕೆಲವರು ಅಡ್ಡಿ ಪಡಿಸಿದ್ದಾರೆ, ಅದು ಯಾರು ಎಂದು ಗೋತ್ತಿಲ್ಲ. ಆದರೆ ಅವರು ಮಾಡಿದ್ದು ತಪ್ಪು. ನಟ ಸಿದ್ಧಾರ್ಥ್ಗೆ ಇದು ನೋವುಂಟು ಮಾಡಿದೆ, ದಯವಿಟ್ಟು ಕ್ಷಮಿಸಿ ಎಂದು ನಾವು ಅವರ ಕ್ಷಮೆ ಕೇಳುತ್ತೇವೆ. ಕನ್ನಡಿಗರು ಸಮಸ್ಯೆಯನ್ನು ನುಂಗಿ ಬದುಕುತ್ತಾರೆ. ಸಮಸ್ಯೆಯನ್ನು ನಾವು ಸಹಿಸಿಕೊಳ್ಳಬೇಕು, ಅದನ್ನು ಬಗೆಹರಿಸಲು ಯೋಚಿಸಬೇಕು. ಕನ್ನಡಿಗರು ಎಲ್ಲಾ ಭಾಷೆಯ ಚಿತ್ರಗಳನ್ನು ನೋಡುತ್ತಾರೆ ಎಂದರು.
8
+ ಹೋರಾಟ ಮಾಡಬೇಕು, ಏನು ಹೋರಾಟ ಮಾಡುವುದು. ಯಾರೇ ಆದರೂ ಪರಿಸ್ಥಿತಿ ನೋಡಿ ಅನುಕೂಲ ಪಡೆದುಕೊಳ್ಳಬಾರದು. ಅದು ಹೋರಾಟದ ಉದ್ದೇಶವಲ್ಲ. ಕಲ್ಲು ಹೊಡೆದರೆ ಅದು ಹೋರಾಟವೇ ಎಂದು ಪ್ರಶ್ನಿಸಿದರು.ಕನ್ನಡಿಗರಿಗೆ ವಿಶ್ವಾದ್ಯಂತ ಗೌರವ ಇದೆ. ಟ್ವಿಟ್ ಮಾಡಿದಾಕ್ಷಣ ಕಾವೇರಿ ಬಗ್ಗೆ ಪ್ರೀತಿ ಇದೆ, ಇಲ್ಲವಾದರೆ ಇಲ್ಲ ಎಂದಲ್ಲ.
9
+ ನಾನು ಹೃದಯದಿಂದ ಮಾತನಾಡುತ್ತೇನೆ. ಮೈಂಡ್ನಿಂದ ಮಾತನಾಡುವುದಿಲ್ಲ. ಚಿತ್ರರಂಗದ ಯಾರನ್ನೂ ಬ್ಲೆಮ್ ಮಾಡಬೇಡಿ. ಅವರು ಬಂದಿಲ್ಲ, ಇವರು ಬಂದಿಲ್ಲ ಎಂದು ದೂಷಿಸಬೇಡಿ. ಏನೇ ಮಾಡಿದರೂ ಪ��ರಾಮಾಣಿಕವಾಗಿ ಮಾಡಿ, ನಾವು ಇರುವುದರಿಂದ ಎಲ್ಲರೂ ಬಂದಂತೆ. ತಮಿಳುನಾಡು ಎಲ್ಲಿದೆ ಪಕ್ಕದಲ್ಲೇ ಇದೆ ತಾನೇ. ಇಲ್ಲಿಗೆ ಬರದಿದ್ದರೆ ಎಂದರೆ ಅವರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಇಷ್ಟ ಇಲ್ಲ ಎಂದಲ್ಲ. ಕೆಲವರು ನಮ್ಮ ಮುಖ ನೋಡಲು ಬರುತ್ತಾರೆ, ಇನ್ನೂ ಕೆಲವರು ಸೆಲಿ ತೆಗೆದುಕೊಳ್ಳಲು ಬರುತ್ತಾರೆ. ನಮಗೂ ಸ್ವಲ್ಪ ಕಾಲಾವಕಾಶ ಕೊಡಿ ಎಂದರು.
10
+ ತಮಿಳುನಾಡು ಸರ್ಕಾರದ ಜೊತೆ ಚರ್ಚೆ ಮಾಡಿ, ಕೇಂದ್ರ ಸರ್ಕಾರವೂ ಮಧ್ಯ ಪ್ರವೇಶ ಮಾಡಲಿ. ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆ ಹರಿಸಿ. ವಾರದಲ್ಲಿ ಮಳೆ ಬಂದರೆ ಸಮಸ್ಯೆ ತನ್ನಷ್ಟಕ್ಕೆ ಬಗೆ ಹರಿಯುತ್ತದೆ. ಇದಕ್ಕೆ ಪರಸ್ಪರ ನಂಬಿಕೆ ವಿಶ್ವಾಸ ಬೇಕು ಎಂದು ಹೇಳಿದರು.
eesanje/url_46_340_10.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಕರ್ನಾಟಕ ಬಂದ್ : ರೈಲು, ಹೆದ್ದಾರಿ ತಡೆಗೆ ಸಿದ್ಧತೆ, ಪರೀಕ್ಷೆಗಳು ಮುಂದೂಡಿಕೆ
2
+ ಬೆಂಗಳೂರು,ಸೆ.28- ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯದಲ್ಲಿ ನಾಳೆ ಎರಡನೇ ಬಂದ್ ನಡೆಯಲಿದ್ದು, ಸಾವಿರಕ್ಕೂ ಹೆಚ್ಚು ಸಂಘಟನೆ ಗಳು ಬೆಂಬಲ ನೀಡಿರುವುದರಿಂದ ಜಿಲ್ಲೆ, ತಾಲೂಕು ಮಟ್ಟದಲ್ಲೂ ಹೋರಾಟ ತೀವ್ರಗೊಳ್ಳುವ ಸಾಧ್ಯತೆ ಇದೆ. ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ.
3
+ ಬೆಂಗಳೂರಿನಲ್ಲಿ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಏಕಕಾಲಕ್ಕೆ ಜಿಲ್ಲೆಗಳಲ್ಲಿ, ತಾಲೂಕು ಮಟ್ಟಗಳಲ್ಲಿ ಬಂದ್ ಆಚರಣೆಯಾಗಲಿದ್ದು, ಪ್ರತಿಭಟನೆ ನಡೆಸಲು ಚರ್ಚೆಗಳು ನಡೆದಿವೆ. ಜೀವನಾವಶ್ಯಕವಾದ ಆಸ್ಪತ್ರೆ, ಔಷಧಾಲಯಗಳು, ಹಾಲು, ಹಣ್ಣು, ತರಕಾರಿ ಯಂತಹ ಅಗತ್ಯ ಸರಕು ಮತ್ತು ಸೇವೆ ಹೊರತುಪಡಿಸಿದರೆ ಉಳಿದಂತೆ ಎಲ್ಲಾ ಚಟು ವಟಿಕೆಗಳು ಸ್ತಬ್ಧಗೊಳ್ಳಲಿವೆ ಎಂದು ಕನ್ನಡಪರ ಸಂಘಟನೆಗಳು ತಿಳಿಸಿವೆ.
4
+ ವಾಟಾಳ್ ನಾಗರಾಜ್ ಅವರ ಪ್ರಕಾರ 1900 ಕ್ಕೂ ಹೆಚ್ಚು ಸಂಘಟನೆಗಳು ರಾಜ್ಯಾದ್ಯಂತ ಬಂದ್‍ಗೆ ಕೈಜೋಡಿಸಿವೆ. ಚಾಮರಾಜನಗರದಿಂದ ಬೀದರ್‍ವರೆಗೂ, ಮಂಗಳೂರಿನಿಂದ ಕೋಲಾರದವರೆಗೂ ಅಖಂಡ ಕರ್ನಾಟಕ ಕಾವೇರಿಯ ಅನ್ಯಾಯಕ್ಕೆ ಧ್ವನಿ ಎತ್ತಲಿದೆ ಎಂದಿದ್ದಾರೆ. ಒಂದೇ ವಾರದಲ್ಲಿ ಎರಡು ಬಂದ್‍ಗಳು ನಡೆಯುತ್ತಿರುವುದು ರಾಜ್ಯ ಹಾಗೂ ಬೆಂಗಳೂರಿನ ಜನರಿಗೆ ದುಬಾರಿ ಎನಿಸಿದರೂ ಜೀವನದಿಯ ರಕ್ಷಣೆಗಾಗಿ ಪ್ರತಿಭಟನೆಗಳು ನಿರಂತರವಾಗಿ ಮುಂದುವರೆದಿವೆ.
5
+ ಜೆಡಿಎಸ್, ಬಿಜೆಪಿಯ ಕೆಳ ಹಂತದ ನಾಯಕರಿಗೆ ಕಾಂಗ್ರೆಸ್ ಗಾಳ
6
+ ಮೊನ್ನೆ ಕಬ್ಬು ಬೆಳೆಗಾರರ ಸಂಘ, ಅಮ್ ಆದ್ಮಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ ನಡೆಸಿದ್ದವು. ನಾಳೆ ನಡೆಯಲಿರುವ ಬಂದ್‍ನಲ್ಲಿ ರೈಲು ಸಂಚಾರ, ಹೆದ್ದಾರಿ ತಡೆ ಮಾಡುವುದರ ಜೊತೆಗೆ ಅಂಚೆ ಸೇರಿದಂತೆ ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ ಹಾಕಲು ತಯಾರಿ ನಡೆದಿದೆ.
7
+ ಸಾರಿಗೆ ವಲಯದ ಖಾಸಗಿ ವಾಹನಗಳ ಮಾಲೀಕರು, ಸರ್ಕಾರದ ನಿಗಮಗಳ ನೌಕರ ಸಂಘಟನೆಗಳು ಬಂದ್‍ಗೆ ಬೆಂಬಲ ವ್ಯಕ್ತಪಡಿಸಿರುವುದರಿಂದ ಸಂಚಾರ ಅಸ್ತವ್ಯಸ್ಥಗೊಳ್ಳುವ ಸಾಧ್ಯತೆ ಇದೆ. ಬಂದ್ ಯಶಸ್ವಿಗಾಗಿ ಕನ್ನಡಪರ ಸಂಘಟನೆಗಳು ಮೇಲಿಂದ ಮೇಲೆ ಸಭೆಗಳನ್ನು ನಡೆಸುತ್ತಿವೆ. ಕನ್ನಡ ಚಲನಚಿತ್ರೋದ್ಯಮ ತನ್ನೆಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಬಂದ್‍ಗೆ ಕೈಜೋಡಿಸಲಿದೆ ಎಂದು ಹೇಳಲಾಗುತ್ತಿದೆ.
8
+ ಕರವೇಯ ನಾರಾಯಣ ಗೌಡ ಅವರ ಬಣ ಬಂದ್‍ಗೆ ಬೆಂಬಲ ನೀಡುವುದಿಲ್ಲ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿವೆ. ಆದರೆ ಅದೇ ದಿನ ಕಾವೇರಿಗಾಗಿ ಪ್ರತಿಭಟನೆ ನಡೆಸಲಿದೆ. ಕರವೇಯ ಪ್ರವೀಣ್ ಶೆಟ್ಟಿ ಬಣ ಬಂದ್‍ನ ನೇತೃತ್ವ ವಹಿಸಿದ್ದು, ಸಕ್ರಿಯವಾಗಿ ಪಾಲ್ಗೊಳ್ಳುತ್ತಿದೆ. ಉಳಿದಂತೆ ಕನ್ನಡ ಸೇನೆ ಹಾಗೂ ನೂರಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಲಾಗುತ್ತಿದೆ.
9
+ ಕರ್ನಾಟಕ ಬಂದ್ ವಿಷಯದಲ್ಲಿ ಸಿಡಿಮಿಡಿ ವ್ಯಕ್ತಪಡಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡೆರಡು ಬಂದ್ ಅಗತ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ಬಂದ್, ಪ್ರತಿಭಟನಾ ಮೆರವಣಿಗೆಗಳಿಗೆ ಅವಕಾಶವಿಲ್ಲ. ಸಾರ್ವಜನಿಕ ಆಸ್ತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ಪ್ರತಿಭಟನೆ ನಡೆಸಲು ತಮ್ಮ ಆಕ್ಷೇಪವಿಲ್ಲ ಎಂದಿದ್ದಾರೆ.
10
+ ಗೃಹಸಚಿವ ಡಾ.ಜಿ.ಪರಮೇಶ್ವರ್ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಬಂದ್ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಬೆಂಗಳೂರು ಬಂದ್ ವೇಳೆ ಪೊಲೀಸರು ವ್ಯಾಪಕ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ರಾಜ್ಯಸರ್ಕಾರ 50 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದೆ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದರು. ಬಲ ಪ್ರಯೋಗದ ಮೂಲಕ ಹೋರಾಟಗಾರರನ್ನು ಬಂಧಿಸಲಾಗುತ್ತಿದೆ.
11
+ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ
12
+ ಪ್ರತಿಭಟನೆಗಳನ್ನು ನಿಯಂತ್ರಿಸಲು ಪೊಲೀಸ್ ರಾಜ್ಯ ನಿರ್ಮಾಣ ಮಾಡಲಾಗಿದೆ. ಇದೇ ಧೋರಣೆಯನ್ನು ಮುಂದುವರೆಸಿದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.
eesanje/url_46_340_11.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಹರಿಪ್ರಸಾದ್ ಜತೆ ಡಿಸಿಎಂ ಸಮಾಲೋಚನೆ : ಹೈಕಮಾಂಡ್ ಸಂದೇಶ ರವಾನೆ
2
+ ಬೆಂಗಳೂರು, ಸೆ.28- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ಕಾಂಗ್ರೆಸ್‍ನಲ್ಲಿ ಸಂಚಲನ ಮೂಡಿಸಿದ್ದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಮಾಲೋಚನೆ ನಡೆಸಿದ್ದಾರೆ.
3
+ ಬಿ.ಕೆ.ಹರಿಪ್ರಸಾದ್ ಅವರನ್ನು ತಮ್ಮ ಮನೆಗೆ ಕರೆಸಿಕೊಂಡ ಡಿ.ಕೆ.ಶಿವಕುಮಾರ್ ಅವರು, ಪಕ್ಷ ಸಂಘಟನೆ, ಲೋಕಸಭೆ ಚುನಾವಣೆ ಹಾಗೂ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಮೂಲಗಳ ಪ್ರಕಾರ, ಹೈಕಮಾಂಡ್ ಕಳುಹಿಸಿರುವ ಸಂದೇಶವನ್ನು ಡಿ.ಕೆ.ಶಿವಕುಮಾರ್ ಅವರು ಬಿ.ಕೆ.ಹರಿಪ್ರಸಾದ್ ಅವರಿಗೆ ರವಾನಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲ ಮೂಡಿಸದಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
4
+ ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್‍ನ ಹಿರಿಯ ನಾಯಕರಾಗಿದ್ದು, ಎಐಸಿಸಿಯಲ್ಲಿ ಸುದೀರ್ಘ ಕಾಲ ಪ್ರಧಾನ ಕಾರ್ಯದರ್ಶಿಯಾಗಿ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಪ್ರಸ್ತುತವಾಗಿ ರಾಜ್ಯದಲ್ಲಿ ಅವರನ್ನು ವಿಧಾನಪರಿಷತ್‍ನ ಸದಸ್ಯರನ್ನಾಗಿ ನಿಯೋಜಿಸಲಾಗಿದೆ.
5
+ ಜೆಡಿಎಸ್, ಬಿಜೆಪಿಯ ಕೆಳ ಹಂತದ ನಾಯಕರಿಗೆ ಕಾಂಗ್ರೆಸ್ ಗಾಳ
6
+ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹರಿಪ್ರಸಾದ್ ವಿಧಾನಪರಿಷತ್‍ನ ವಿರೋಧಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದ್ದಂತೆ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಗಳಿದ್ದವು. ಆದರೆ ಹರಿಪ್ರಸಾದ್ ಅವರನ್ನು ಕಡೆಗಣಿಸಿ ಮಧು ಬಂಗಾರಪ್ಪ ಅವರಿಗೆ ಮಣೆ ಹಾಕಲಾಗಿದೆ ಎಂಬ ಆರೋಪಗಳಿವೆ.
7
+ ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಹರಿಪ್ರಸಾದ್ ಅವರು ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಅಷ್ಟಕ್ಕೆ ಸುಮ್ಮನಾಗದೆ ಹಲವಾರು ಬಾರಿ ತಮ್ಮ ಹೇಳಿಕೆಗಳನ್ನು ಅವರ ವಿರುದ್ಧ ಪುನರ್ ಉಚ್ಛರಿಸಿದರು. ಇದು ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟುಮಾಡಿತ್ತು.
8
+ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ
9
+ ಹೈಕಮಾಂಡ್ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡಿ ಹತ್ತು ದಿನಗಳಲ್ಲಿ ಉತ್ತರಿಸುವಂತೆ ಸೂಚಿಸಿತ್ತು. ಅದಕ್ಕೆ ಹರಿಪ್ರಸಾದ್ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಮತ್ತೊಂದು ವದಂತಿಯ ಪ್ರಕಾರ ಬಿ.ಕೆ.ಹರಿಪ್ರಸಾದ್ ಉದ್ದೇಶಪೂರಕವಾಗಿಯೇ ಹೇಳಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಯ ಬಳಿಕ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಪೂರ್ವಭಾವಿಯ��ಗಿ ಈ ತಯಾರಿಗಳು ನಡೆಯುತ್ತಿವೆ ಎಂಬ ಚರ್ಚೆಗಳಿದ್ದವು.
10
+ ನೋಟಿಸ್ ಬಳಿಕ ಹರಿಪ್ರಸಾದ್ ಅವರು ಮೌನಕ್ಕೆ ಶರಣಾಗಿದ್ದಾರೆ. ಇಂದು ಡಿ.ಕೆ.ಶಿವಕುಮಾರ್ ಭೇಟಿಯಾಗಿರುವುದು ಹಲವಾರು ಕುತೂಹಲಗಳಿಗೆ ಕಾರಣವಾಗಿದೆ.
eesanje/url_46_340_12.txt ADDED
@@ -0,0 +1,8 @@
 
 
 
 
 
 
 
 
 
1
+ ಬೆಂಗಳೂರಿನಲ್ಲಿ ಇಂದು ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ
2
+ ಬೆಂಗಳೂರು, ಸೆ.28- ನಾಳೆಯ ಕರ್ನಾಟಕ ಬಂದ್‍ಗೆ ನಗರ ಸೇರಿದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಇಂದು ರಾತ್ರಿ 12 ಗಂಟೆಯಿಂದ ನಾಳೆ ರಾತ್ರಿ 12 ಗಂಟೆ ವರೆಗೆ ನಗರದಾದ್ಯಂತ ಸಿಆರ್‍ಪಿಸಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದ್ದಾರೆ.
3
+ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸ್ಥಳೀಯ ಪೊಲೀಸರ ಜತೆಗೆ ಎರಡು ಕಂಪೆನಿ ಆರ್‍ಎಎಫ್,ಕೆಎಸ್‍ಆರ್‍ಪಿಯ 60, ಸಿಎಆರ್‍ನ 40 ತುಕಡಿಗಳನ್ನು ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿದೆ. ಎಲ್ಲ ಠಾಣೆಗಳ ಇನ್ಸ್‍ಪೆಕ್ಟರ್‍ಗಳು, ಉಪ ವಿಭಾಗದ ಎಸಿಪಿಗಳು, ಎಲ್ಲ ವಿಭಾಗಗಳ ಡಿಸಿಪಿಗಳು, ಜಂಟಿ ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರುಗಳು ನಾಳೆ ಗಸ್ತಿನಲ್ಲಿರುತ್ತಾರೆ.
4
+ ಯಾವುದೇ ರೀತಿಯ ಸಣ್ಣಪುಟ್ಟ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಆಯುಕ್ತರು ಹೇಳಿದರು. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಬಂದ್ ನಡೆಸುವುದು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳಿಗೆ ವಿರುದ್ಧವಾಗಿದೆ. ಆದ್ದರಿಂದ ನಗರದಲ್ಲಿ ಯಾವುದೇ ರೀತಿಯ ಬಂದ್ ಮಾಡದಂತೆ ಸಂಘಟನೆಗಳಿಗೆ ಕೋರಲಾಗಿದೆ ಎಂದರು.
5
+ ಪ್ರತಿಭಟನೆ ನಡೆಸಲು ಫ್ರೀಡಂಪಾರ್ಕ್‍ನಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಯಾವುದೇ ಸಂಘಟನೆಗಳಿಗೆ ರ್ಯಾಲಿ, ಮೆರವಣಿಗೆ ನಡೆಸಲು ಅನುಮತಿ ನೀಡಿಲ್ಲ. ಒತ್ತಾಯಪೂರ್ವಕವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸುವುದು ಮತ್ತು ಸಾರ್ವಜನಿಕರಿಗೆ ತೊಂದರೆ ಕೊಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
6
+ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್:ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳೀಯ ಪೊಲೀಸರ ಜೊತೆಗೆ 5 ಕಂಪನಿ ಆರ್‍ಎಎಫ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ.
7
+ ಈ ಸಂಜೆಯೊಂದಿಗೆ ಮಾತನಾಡಿದ ಅವರು, ಆರ್‍ಎಎಫ್ ಪಡೆಯನ್ನು ಮಂಡ್ಯ, ಮೈಸೂರು, ಮಂಗಳೂರು, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ನಿಯೋಜಿಸಲಾಗಿದೆ ಎಂದು ವಿವರಿಸಿದರು. ನಾಳೆ ಎಲ್ಲಾ ಜಿಲ್ಲಾ ಎಸ್‍ಪಿಗಳು, ವಲಯದ ಐಜಿಗಳು, ನಗರಗಳ ಆಯುಕ್ತರು ಗಸ್ತಿನಲ್ಲಿರುತ್ತಾರೆ. ಇಲಾಖೆಯ ಪ್ರತಿಯೊಬ್ಬರೂ ನಾಳೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಿದ್ದೇವೆ. ಹಾಗಾಗಿ ಎಲ್ಲಾ ಸಿಬ್ಬಂದಿ ಕರ್ತವ್ಯದಲ್ಲಿರುತ್ತಾರೆ ಎಂದರು.
8
+ ಸ್ಥಳೀಯ ಪೊಲೀಸರ ಜೊತೆಗೆ 5 ಕಂಪನಿ ಆರ್‍ಎಎಫ್, 250 ತುಕಡಿ ಕೆಎಸ್‍ಆರ್‍ಪಿ ಜೊತೆಗೆ ಡಿಎ���ರ್ ಫ್ಲಟೂನ್ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಗಡಿಗಳಲ್ಲಿ ಹೆಚ್ಚಿನ ಭದ್ರತೆ: ರಾಜ್ಯದ ಗಡಿಗಳಲ್ಲಿಯೂ ಸಹ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ. ಅದರಲ್ಲೂ ತಮಿಳುನಾಡಿನ ಗಡಿಯಲ್ಲಿ ಹೆಚ್ಚು ಪೊಲೀಸರನ್ನು ನಿಯೋಜಿಸಿದ್ದೇವೆ. ಬಂದ್ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
eesanje/url_46_340_2.txt ADDED
@@ -0,0 +1,31 @@
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
1
+ ಕರ್ನಾಟಕ ಬಂದ್ : ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಕಂಪ್ಲೀಟ್ ಚಿತ್ರಣ
2
+ ಬೆಂಗಳೂರು, ಸೆ.29- ತೀವ್ರ ಬರದ ಸಂಕಷ್ಟದಲ್ಲೂ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಸಿ ಕನ್ನಡ ಹಾಗೂ ರೈತಪರ ಸಂಘಟನೆಗಳು ಕರೆ ಕೊಟ್ಟಿದ್ದ ಅಖಂಡ ಕರ್ನಾಟಕ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕನ್ನಡಿಗರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಎಂಬ ಎಚ್ಚರಿಕೆ ಸಂದೇಶವನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಲಾಯಿತು.
3
+ ಬೆಂಗಳೂರು ಬಂದ್ ನಂತರ ನಡೆದ  ಕರ್ನಾಟಕ ಬಂದ್‍ಗೆ ಪಕ್ಷಭೇದ ಮರೆತು ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರುಗಳು, ಬೆಂಬಲ ಸೂಚಿಸಿದರು. ಕಾವೇರಿ ಸೇರಿದಂತೆ ನಾಡು, ನುಡಿ, ಜಲದ ವಿಷಯದಲ್ಲಿ ಅನ್ಯಾಯವಾದರೆ ಕನ್ನಡಿಗರು  ಕೈಕಟ್ಟಿ ಕೂರುವುದಿಲ್ಲ ಎಂಬ ಎಚ್ಚರಿಕೆಯನ್ನು ಕೊಡಲಾಯಿತು.
4
+ ಕರ್ನಾಟಕ ಬಂದ್‍ಗೆ ಬೆಂಗಳೂರು, ಹಳೆ ಮೈಸೂರು ಭಾಗದ, ತುಮಕೂರು, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗಿತ್ತು. ಆದರೆ ಮಧ್ಯ ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡು ಬಂದಿತು.
5
+ ಆಸ್ಪತ್ರೆ, ಔಷಧ ಅಂಗಡಿಗಳು, ಹಾಲಿನ ಬೂತ್, ಅಂಬ್ಯುಲೆನ್ಸ್, ಪೆಟ್ರೋಲ್ ಬಂಕ್, ಗ್ಯಾಸ್ ಅಂಗಡಿ ಮತ್ತಿತರ ಅಗತ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಕಂಡುಬರಲಿಲ್ಲ. ಉಳಿದಂತೆ ಆಟೋ, ಕ್ಯಾಬ್, ಸರಕು ವಾಹನಗಳು, ಖಾಸಗಿ ಬಸ್‍ಗಳು, ಥಿಯೇಟರ್, ಮಾಲ್‍ಗಳು, ಸೂಪರ್ ಮಾರ್ಕೆಟ್, ಬೀದಿ ಬದಿ ಅಂಗಡಿಗಳು, ಆಭರಣ ಅಂಗಡಿಗಳು, ಕೈಗಾರಿಕೆಗಳು ಮತ್ತಿತರ ಸಂಘಟನೆಗಳು ಬೆಂಬಲ ಕೊಟ್ಟಿದ್ದವು. ಕೆಲವು ಭಾಗಗಳಲ್ಲಿ ಹೊಟೇಲ್‍ಗಳು ಬೆಳಗಿನಿಂದಲೇ ಮುಚ್ಚಿದ್ದವು. ಉಳಿದ ಕಡೆ ಎಂದಿನಂತೆ ಕಾರ್ಯನಿರ್ವಹಿಸಿದ ದೃಶ್ಯ ಕಂಡು ಬಂದಿತು.
6
+ ಶಕ್ತಿ ಕೇಂದ್ರದಲ್ಲೂ ಜನರಿಲ್ಲ:
7
+ ಆಡಳಿತದ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ಉದ್ಯೋಗ ಸೌಧ ಸೇರಿದಂತೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಖ್ಯೆ ತೀರ ವಿರಳವಾಗಿತ್ತು. ಇಲಾಖೆಗಳ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದರು. ಉಳಿದಂತೆ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲಿ ಬಂದ್‍ಗೆ ನೈತಿಕ ಬೆಂಬಲ ಕೊಡಲಾಗಿತ್ತಾದರೂ ಜನಜೀವನ ಎಂದಿನಂತೆ ಸಹಜ ಸ್ಥಿತಿಯಲ್ಲೇ ಇತ್ತು.
8
+ ಬೆಂಗಳೂರು ಸ್ತಬ್ಧ:
9
+ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಬಂದ್‍ಗೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಯಿತು. ಬಿಎಂಟಿಸಿ, ಕೆಎಸ್‍ಆರ್‍ಟಿಸಿ, ಆಟೋ, ಟ್ಯಾಕ್ಸಿ, ಓಲಾ, ಊಬರ್ ಸಂಚಾರ ವಿರಳವಾಗಿತ್ತು. ಸದಾ ಜನ ಸಂದಣಿಯಿಂದ ಕೂಡಿದ್ದ ಕೆಂಪ���ಗೌಡ ಬಸ್ ನಿಲ್ದಾಣ, ಕೆಆರ್ ಮಾರುಕಟ್ಟೆ, ಶಾಂತಿ ನಗರ ಬಸ್ ನಿಲ್ದಾಣ ಮತ್ತಿತರ ಕಡೆ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.ತಮಿಳುನಾಡಿನ ಅತ್ತಿಬೆಲೆ ಮತ್ತು ಹೊಸೂರಿನಿಂದ ಬರುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಬಸ್‍ಗಳನ್ನು ಮಾರ್ಗಮಧ್ಯೆ ತಡೆ ಹಿಡಿಯಲಾಯಿತು.
10
+ ಹೋರಾಟಗಾರರು ಪೊಲೀಸರು ವಶಕ್ಕೆ:
11
+ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರಾದರೂ ಪೊಲೀಸರು ತಕ್ಷಣವೇ ಅವರನ್ನು ವಶಕ್ಕೆ ಪಡೆದಿದ್ದಾರೆ.ವಿಮಾನ ನಿಲ್ದಾಣದ ಪ್ರಯಾಣಿಕರ ಆಗಮನದ ಗೇಟ್ ಬಳಿ ಕನ್ನಡದ ಬಾವುಟಗಳನ್ನು ಹಿಡಿದು ಕೇಂದ್ರ ಸರ್ಕಾರ ಮತ್ತು ತಮಿಳುನಾಡಿನ ವಿರುದ್ಧ ಘೋಷಣೆಗಳನ್ನು ಕೂಗಿದರು.
12
+ ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ, ಶಿವರಾಮೇಗೌಡ ಸೇರಿದಂತೆ ಹಲವರು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ ಪೊಲೀಸರು ಮಾರ್ಗಮಧ್ಯೆ ತಡೆದು ಅವರನ್ನು ವಶಕ್ಕೆ ಪಡೆದುಕೊಂಡರು.
13
+ ಚಿತ್ರರಂಗದ ಬೆಂಬಲ:
14
+ ಕನ್ನಡ ಚಿತ್ರರಂಗದ ದಿಗ್ಗಜರು ಕೂಡ ಪ್ರತಿಭಟನೆ ನಡೆಸುವ ಮೂಲಕ ಹೋರಾಟಗಾರರಿಗೆ ನೈತಿಕ ಬೆಂಬಲ ಸೂಚಿಸಿದರು. ನಗರದ ಗುರುರಾಜ ಕಲ್ಯಾಣ ಮಂಟಪದ ಬಳಿ ನಡೆದ ಪ್ರತಿಭಟನೆಯಲ್ಲಿ ನಟರಾದ ಶಿವರಾಜ್‍ಕುಮಾರ್, ದರ್ಶನ್, ಶ್ರೀಮುರುಳಿ, ವಿಜಯರಾಘವೇಂದ್ರ, ಉಪೇಂದ್ರ, ಉಮಾಶ್ರೀ, ಶೃತಿ, ದುನಿಯಾ ವಿಜಿ, ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಹಲವರು ಭಾಗಿಯಾಗಿ ಕಾವೇರಿ ಹೋರಾಟಕ್ಕೆ ಚಿತ್ರರಂಗ ಯಾವಾಗಲೂ ಸಿದ್ದವಾಗಿರುತ್ತದೆ ಎಂಬ ಅಭಯ ನೀಡಿದರು.
15
+ ಇನ್ನು ಬಂದ್ ವೇಳೆ ಅಲ್ಲಲ್ಲಿ ಕೆಲವು ಘಟನೆಗಳು ಕೂಡ ಜರುಗಿವೆ. ಟೌನ್‍ಹಾಲ್ ಬಳಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದ ಗೆಜ್ಜಲಗೆರೆ ಬಳಿ ಕನ್ನಡಪರ ಹೋರಾಟಗಾರರು ಮೈಸೂರಿನಿಂದ ಬರುತ್ತಿದ್ದ ರೈಲನ್ನು ತಡೆಯಲು ಟ್ರ್ಯಾಕ್ ಬಳಿ ಧರಣಿ ಕುಳಿತರು. ತಕ್ಷಣವೇ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾ ನಿರತರನ್ನು ವಶಪಡಿಸಿಕೊಂಡರು.
16
+ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಹೋರಾಟಗಾರರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿದ್ದು, ಎಲ್ಲರ ಗಮನ ಸೆಳೆಯಿತು. ನ್ಯಾಯದೇವತೆಯ ಕಣ್ಣು ಕಟ್ಟಿದ್ದಂತೆ ಕನ್ನಡಪರ ಹೋರಾಟಗಾರರ ಕಣ್ಣಿಗೂ ಬಟ್ಟೆ ಕಟ್ಟಲಾಗಿದೆ. ನಮಗೆ ನ್ಯಾಯ ಸಿಗುತ್ತಿಲ್ಲ. ನಾವು ಯಾರ ವಿರುದ್ಧವೂ ಪ್ರತಿಭಟನೆ ನಡೆಸುತ್ತಿಲ್ಲ. ಇದು ನಮ್ಮ ಸಾತ್ವಿಕ ಸಿಟ್ಟು ಎಂದು ಹೇಳಿದರು. ಮತ್ತೊಂದು ವಿಶೇಷವೆಂದರೆ ದಾವಣಗೆರೆಯಲ್ಲಿ ಐದು ವರ್ಷದ ಬಾಲಕನೊಬ್ಬ ಪ್ರತಿಭಟನೆಯಲ್ಲಿ ಭಾಗಿಯಾಗಿ ಎಲ್ಲರ ಗಮನ ಸೆಳೆದ. ಮೋಹಿತ್ ಎಂಬ ಬಾಲಕ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಪ���ರತಿಭಟನೆಯಲ್ಲಿ ಪಾಲ್ಗೊಂಡಿದ್ದನು.
17
+ ರೈತನ ಏಕಾಂಗಿ ಪ್ರತಿಭಟನೆ:
18
+ ಧಾರವಾಡದ ಜುಬಿಲಿ ಸರ್ಕಲ್‍ನಲ್ಲಿ ರೈತನೊಬ್ಬ ವಾಹನಗಳನ್ನು ತಡೆದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರೆ, ಚಿತ್ರದುರ್ಗದಲ್ಲಿ ಕರವೇ ಕಾರ್ಯಕರ್ತರು ಸಂಸದರ ಅಣಕು ಶವಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು.ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಿರತರು ಖಾಲಿ ಕೊಡ ಹಿಡಿದು ಪ್ರತಿಭಟನೆ ಮಾಡಿದರೆ, ತುಮಕೂರು ಮತ್ತಿತರ ಕಡೆಯೂ ಬಂದ್‍ಗೆ ಬೆಂಬಲವನ್ನು ಸೂಚಿಸಲಾಗಿತ್ತು.
19
+ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಎಂಟು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಬಹುತೇಕ ಕಡೆ ಸ್ವಯಂ ಪ್ರೇರಿತವಾಗಿ ಬಂದು ಬಂದ್‍ಗೆ ಬೆಂಬಲವನ್ನು ಸೂಚಿಸಿದ್ದರು. ಬಂದ್ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ನಾಳೆಗೆ ಮುಂದೂಡಲಾಗಿತ್ತು.ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಲ್ಲಲ್ಲಿ ತಡೆವೊಡ್ಡಿದಿರುವ ಘಟನೆಗಳು ನಡೆದಿವೆ.
20
+ ಹೈದರಾಬಾದ್‍ನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಲ ಬಸ್‍ಗಳನ್ನು ದೊಡ್ಡಬಳ್ಳಾಪುರ, ಮಹಾರಾಷ್ಟ್ರದಿಂದ ಆಗಮಿಸುತ್ತಿದ್ದ ಬಸ್‍ಗಳನ್ನು ಬೆಳಗಾವಿ ಬಳಿ, ಕೆರಳದಿಂದ ಬರುತ್ತಿದ್ದ ವಾಹನಗಳನ್ನು ಗುಂಡ್ಲುಪೇಟೆ ಹಾಗೂ ತಮಿಳುನಾಡಿನಿಂದ ಬರುತ್ತಿದ್ದ ವಾಹನಗಳನ್ನು ಅತ್ತಿಬೆಲೆ ಮತ್ತು ಹೊಸೂರು ಚೆಕ್ ಪೋಸ್ಟ್ ಬಳಿ ತಡೆ ಹಿಡಿಯಲಾಯಿತು.
21
+ ಈ ನಡುವೆ ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ವಿಶೇಷವಾಗಿ ತಮಿಳು ಭಾಷಿಗರು ಹೆಚ್ಚಾಗಿ ವಾಸ ಮಾಡುವ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿತ್ತು.
22
+ ಒಟ್ಟಾರೆ ಬಂದ್ ಶಾಂತಿಯುತವಾಗಿ, ಯಶಸ್ವಿಯಾಗಿ ಜರುಗಿದ್ದು, ಕಾವೇರಿಗಾಗಿ ನಾಡಿನ ವಿವಿಧ ಸಂಘಟನೆಗಳು ಒಗ್ಗಟಿನ ಹೋರಾಟವಾಗಿ ನಡೆಸುವ ಮೂಲಕ ಅನ್ಯಾಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ನೀಡಿದವು.
23
+ ಮಡಿಕೇರಿಯಲ್ಲಿ ನೀರಸ :ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಸಿ ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದರೆ, ಕಾವೇರಿ ಹುಟ್ಟುವ ಕೊಡಗಿನಲ್ಲೇ ಬಂದ್ಗೆ ಬೆಂಬಲ ವ್ಯಕ್ತವಾಗಿಲ್ಲ.ಕೊಡಗು ಜಿಲ್ಲಾ ಕೇಂದ್ರವಾದ ಮಡಿಕೇರಿ ವಿರಾಜಪೇಟೆ ಶನಿವಾರಸಂತೆ ಮತ್ತಿತರ ಕಡೆ ಕರ್ನಾಟಕ ಬಂದ್ಗೆ ಹೇಳಿಕೊಳ್ಳುವಂತಹ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
24
+ ಜಿಲ್ಲೆಯಾದ್ಯಂತ ಯಾವುದೇ ಸಂಘಟನೆಗಳಿಗೆ ಬೆಂಬಲವನ್ನು ಸಾರ್ವಜನಿಕರು ನೀಡಿರಲಿಲ್ಲ. ಹೀಗಾಗಿ ದೈನಂದಿನ ಜನಜೀವನ ಸಹಜವಾಗಿತ್ತು.ಶಾಲಾ-ಕಾಲೇಜುಗಳು , ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದರೆ, ಬಸ್, ಆಟೋ ಸಂಚಾರ ಎಲ್ಲೆಡೆ ಸಹಜ ಸ್ಥ��ತಿಯಲ್ಲಿದ್ದವು.
25
+ ಇಂದು ನಡೆದ ಬಂದ್ಗೆ ಬೆಂಬಲ ನೀಡಬೇಕೆಂದು ಕಳೆದ 2-3 ದಿನಗಳಿಂದಲೂ ವಿವಿಧ ಸಂಘಟನೆಗಳು ಜಿಲ್ಲೆಯ ಅನೇಕ ಕಡೆ ಅಭಿಯಾನ ನಡೆಸಿದ್ದವು. ಆದರೆ, ಜಿಲ್ಲೆಯ ಜನತೆ ಕರ್ನಾಟಕ ಬಂದ್ಗೆ ಬೆಂಬಲವನ್ನೇ ನೀಡಿಲ್ಲ. ಕಾವೇರಿ ಹುಟ್ಟುವ ಜಿಲ್ಲೆಯಲ್ಲೇ ಬಂದ್ಗೆ ಬೆಂಬಲ ಸಿಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
26
+ ಸಾಂಸ್ಕøತಿಕ ನಗರಿ ಸ್ತಬ್ಧಮೈಸೂರು, ಸೆ.29- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾಂಸ್ಕøತಿಕ ನಗರಿಯಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ನಗರದ ವಿವಿಧ ಕನ್ನಡಪರ ಸಂಘಟನೆಗಳು ಕೆಲವು ಪ್ರಮುಖ ವೃತ್ತಗಳಲ್ಲಿ ಪ್ರತಿಭಟನೆ ನಡೆಸಿ ಕಾವೇರಿ ನಮ್ಮದು, ಕಾವೇರಿ ನೀರು ರಕ್ಷಿಸುವುದು ನಮ್ಮ ಹೊಣೆ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.
27
+ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನಗರದಲ್ಲಿ ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.ಕಾವೇರಿ ನೀರಿಗಾಗಿ ನಗರ ಮತ್ತು ಜಿಲ್ಲೆಯಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಹೊರರಾಜ್ಯಗಳಿಂದ ನಗರಕ್ಕೆ ಇಂದು ಬರಬೇಕಾಗಿದ್ದ ಯಾವುದೇ ತರಕಾರಿ ವಾಹನಗಳು ಬಂದಿಲ್ಲ. ಎಪಿಎಂಸಿ ಮಾರುಕಟ್ಟೆ ಸಿಬ್ಬಂದಿ ಸಹ ಸಂಪೂರ್ಣ ಮುಚ್ಚಿ ಬಂದ್ಗೆ ಸಹಕರಿಸಿದ್ದು, ಎಪಿಎಂಸಿ ಖಾಲಿಖಾಲಿಯಾಗಿತ್ತು.
28
+ ನಗರದಲ್ಲಿನ ಮಾಲ್ಗಳು, ವ್ಯವಹಾರ ಕೇಂದ್ರವಾಗಿರುವ ದೇವರಾಜ ರಸ್ತೆ, ಅಶೋಕ ರಸ್ತೆ, ಸೈಯಾಜಿ ರಾವ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಅಂಗಡಿಗಳು ಬಂದ್ ಆಗಿದ್ದವು.ಪ್ರತಿ ಬಾರಿ ಬಂದ್ ವೇಳೆ ಎನ್ಆರ್ ಮೊಹಲ್ಲಾದಲ್ಲಿ ಅಷ್ಟಾಗಿ ಅಂಗಡಿಗಳನ್ನು ಮುಚ್ಚುತ್ತಿರಲಿಲ್ಲ. ಆದರೆ ಈ ಬಾರಿ ಸ್ವಯಂ ಪ್ರೇರಿತವಾಗಿ ಮುಚ್ಚಿದ್ದರಿಂದ ಮೊಹಲ್ಲಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
29
+ ನಗರದ ಚಿಕ್ಕಮಾರುಕಟ್ಟೆ, ದೇವರಾಜ ಮಾರುಕಟ್ಟೆ ಸಂಪೂರ್ಣ ಬಂದ್ ಮಾಡಲಾಗಿತ್ತು. ಬೆಳಗಿನ ಜಾವದಿಂದಲೂ ಯಾವುದೇ ವ್ಯಾಪಾರ ವಹಿವಾಟುಗಳು ನಡೆದಿಲ್ಲ.ಪೆಟ್ರೋಲ್ ಬಂಕ್ ಮಾಲೀಕರೂ ಸಹ ಬಂಕ್ಗಳನ್ನು ಮುಚ್ಚಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದರಿಂದ ನಗರದಾದ್ಯಂತ ಎಲ್ಲಾ ಪೆಟ್ರೋಲ್ ಬಂಕ್ಗಳಿಗೆ ಬೀಗ ಹಾಕಲಾಗಿತ್ತು.
30
+ ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ವಿರಳವಾಗಿದ್ದು ಕಂಡು ಬಂತು. ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಗರದಾದ್ಯಂತ ಯಾವುದೇ ಬಸ್ ಸಂಚಾರ ಇರಲಿಲ್ಲ. ಖಾಸಗಿ ಬಸ್ಗಳವರು ಸಹ ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ. ಸರ್ಕಾರಿ ಬಸ್ಗಳು ವಿರಳವಾಗಿತ್ತಾದರೂ ಪ್ರಯಾಣಿಕ ರಿಲ್ಲದೆ ಬಣಗೂಡುತ್ತಿದ್ದವು.
31
+ ಅದೇ ರೀತಿ ಜಿಲ್ಲೆ ಹಾಗೂ ಹೊರರಾಜ್ಯಕ್ಕೆ ತೆರಳುವ ಬಸ್ ನಿಲ್ದಾಣವಾದ ಸಬರ್ಬನ್ ಬಸ್ ನಿಲ್ದಾಣದಲ್ಲಿ ವಿವಿಧೆಡೆಗಳಿಂದ ಆಗಮಿಸಿದ ಪ್ರಯಾಣಿಕರು ತಮ್ಮ ಮನೆಗಳಿಗೆ ತೆರಳಲಾರದೇ ಪರ��ಾಡುವಂತಾಯಿತು. ಅಲ್ಲದೆ ಬೇರೆಡೆ ಹೋಗಲು ಬಂದಿದ್ದ ಕೆಲವರು ಬಸ್ ಸಿಗದೇ ವಾಪಸ್ ಆದ ದೃಶ್ಯ ಸಹ ಕಂಡು ಬಂತು.
eesanje/url_46_340_3.txt ADDED
@@ -0,0 +1,8 @@
 
 
 
 
 
 
 
 
 
1
+ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲಿ ಇನ್ನೂ 3 ದಿನ ಮಳೆ
2
+ ಬೆಂಗಳೂರು, ಸೆ.29- ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಸೇರಿದಂತೆ ವಾತಾವರಣದಲ್ಲಿ ಹಲವು ರೀತಿಯ ಬದಲಾವಣೆಗಳಾಗಿದ್ದು, ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
3
+ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಳೆಯಾಗಲಿದೆ. ಕಳೆದ ಎಂಟತ್ತು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳ ಕಾಲ ಚದುರಿದಂತೆ ಮಳೆಯಾಗಲಿದೆ. ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಆರಂಭವಾಗಿದೆ. ಅಲ್ಲದೆ, ಈಶಾನ್ಯ ಹಿಂಗಾರು ಆರಂಭದ ಪ್ರಕ್ರಿಯೆಗಳು ಶುರುವಾಗಿವೆ. ಈ ಪರ್ವ ಕಾಲದಲ್ಲಿ ಮಳೆಯಾಗುವುದು ಸಹಜ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದರು.
4
+ ರಾಜಸ್ತಾನದಿಂದ ಮುಂಗಾರು ಮಳೆ ಮರಳುವಿಕೆ ಆರಂಭಿಸಿದ್ದು, ಇನ್ನೊಂದು ವಾರದಲ್ಲಿ ಮುಂಗಾರು ನಿರ್ಗಮಿಸಲಿದೆ. ಆ ನಂತರ ಹಿಂಗಾರು ಮಳೆ ಆರಂಭವಾಗಲಿದೆ. ಆಗಸ್ಟ್‍ನಂತೆ ಸೆಪ್ಟೆಂಬರ್‍ನಲ್ಲೂ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆದರೆ ಮಳೆಯ ಕೊರತೆ ಪ್ರಮಾಣ ಆಗಸ್ಟ್‍ಗೆ ಹೋಲಿಸಿದರೆ ಸೆಪ್ಟೆಂಬರ್‍ನಲ್ಲಿ ಕಡಿಮೆಯಾಗಿದೆ.
5
+ ಬೆಂಗಳೂರು : ಚಾಕುವಿನಿಂದ ಇರಿದು ರೌಡಿ ಪಪ್ಪಾಯಿ ಸುಹೇಲ್ ಕೊಲೆ
6
+ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಶೇ. 5ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 20ರಷ್ಟು ಉತ್ತರ ಒಳನಾಡಿನಲ್ಲಿ ಶೇ. 6ರಷ್ಟು, ಮಲೆನಾಡಿನಲ್ಲಿ ಶೇ. 34 ಹಾಗೂ ಕರಾವಳಿಯಲ್ಲಿ ಶೇ. 52ರಷ್ಟು ವಾಡಿಕೆಗಳಿಗಿಂತ ಕಡಿಮೆ ಮಳೆ ಕಳೆದ ಒಂದು ವಾರದಲ್ಲಿ ಬಿದಿದ್ದೆ.
7
+ ಸೆ. 1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ಶೇ. 10ರಷ್ಟು ವಾಡಿಕೆಗಿಂತ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 17, ಉತ್ತರ ಒಳನಾಡಿನಲ್ಲಿ ಶೇ. 18, ಮಲೆನಾಡಿನಲ್ಲಿ ಶೇ. 16 ಹಾಗೂ ಕರಾವಳಿ ಶೇ. 23ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾದ ವರದಿಯಾಗಿದೆ.ಜೂನ್ 1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ 631 ಮಿ.ಮೀಟರ್‍ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ. 25ರಷ್ಟು ಮಳೆ ಕೊರತೆ ಉಂಟಾಗಿದೆ.
8
+ ಈ ಅವಯ ವಾಡಿಕೆ ಮಳೆ ಪ್ರಮಾಣ 839 ಮಿ.ಮೀಟರ್ ಆಗಿದೆ. ಮಳೆ ಕೊರತೆ ಮುಂದುವರೆಯುತ್ತಿರುವುದರಿಂದ ರಾಜ್ಯದಲ್ಲಿ ಉಂಟಾಗಿರುವ ಬರದ ಪರಿಸ್ಥಿತಿ ದೂರವಾಗುವ ಲಕ್ಷಣಗಳು ಸದ್ಯಕ್ಕೆ ಗೋಚರಿಸುತ್ತಿಲ್ಲ.
eesanje/url_46_340_4.txt ADDED
@@ -0,0 +1,6 @@
 
 
 
 
 
 
 
1
+ ಕರ್ನಾಟಕ ಬಂದ್ : ಸಿಎಂ ನಿವಾಸಕ್ಕೆ ಬಿಗಿ ಭದ್ರತೆ
2
+ ಬೆಂಗಳೂರು, ಸೆ.29- ಕಾವೇರಿ ಕಿಚ್ಚು ಹೆಚ್ಚಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮುಖ್ಯಮಂತ್ರಿ ಕಚೇರಿ ಹಾಗೂ ನಿವಾಸದ ಎದುರು ಪ್ರತಿಭಟನೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸಲಾಗಿತ್ತು.
3
+ ನಾಲ್ಕಕ್ಕೂ ಹೆಚ್ಚು ಬಿಎಂಟಿಸಿ ಬಸ್‍ಗಳು ಹಾಗೂ ಪೊಲೀಸ್ ವ್ಯಾನ್‍ಗಳನ್ನು ಮುಖ್ಯಮಂತ್ರಿ ಮನೆ ಎದುರು ಕಾಯ್ದಿರಿಸಲಾಗಿತ್ತು. ಅನಿರೀಕ್ಷಿತವಾಗಿ ನುಗ್ಗುವ ಕಾರ್ಯಕರ್ತರನ್ನು ನಿರ್ಬಂಧಿಸಲು ಮತ್ತು ಅವರನ್ನು ವಶಕ್ಕೆ ತೆಗೆದುಕೊಳ್ಳಲು ಅನುಕೂಲವಾಗುವಂತೆ ಅಗತ್ಯ ಪೊಲೀಸ್ ಸಿಬ್ಬಂದಿ ಮತ್ತು ವಾಹನ ವ್ಯವಸ್ಥೆಗಳನ್ನು ಸಿದ್ಧವಾಗಿಟ್ಟುಕೊಳ್ಳಲಾತ್ತು.
4
+ ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ಸಿಎಂ ಮನೆ ಮೇಲೆ ದಾಳಿಗೆ ಯತ್ನ
5
+ ಈ ಮೊದಲು ಸೆ.26ರಂದು ಬೆಂಗಳೂರು ಬಂದ್ ನಡೆಸಿದ್ದ ಕಬ್ಬುಬೆಳೆಗಾರರ ಸಂಘ ಹಾಗೂ ಇತರ ಕೆಲ ಸಂಘಟನೆಗಳ ಮುಖಂಡರು ತಮ್ಮ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದವು.
6
+ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣವೇ ನಿಲ್ಲಸಬೇಕು ಎಂಬ ಪ್ರಮುಖ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಂಘಟನೆಗಳು ಇಂದು ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿವೆ. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿತ್ತು. ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನಿಯೋಗದ ಜೊತೆಗೆ ಮುಖ್ಯಮಂತ್ರಿ ಮಧ್ಯಾಹ್ನ ಮಾತುಕತೆ ನಡೆಸಲಿದ್ದಾರೆ.
eesanje/url_46_340_5.txt ADDED
@@ -0,0 +1,7 @@
 
 
 
 
 
 
 
 
1
+ ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ಹರಿಸುತ್ತಿರುವ ಸರ್ಕಾರದ ವಿರುಧ್ದ ವಾಟಾಳ್ ಕೆಂಡ
2
+ ಬೆಂಗಳೂರು,ಸೆ.29- ರಾಜ್ಯ ಸರ್ಕಾರ ಜನರನ್ನು ಕತ್ತಲಿಟ್ಟು ಕದ್ದು ಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.ಕರ್ನಾಟಕ ಬಂದ್ ಬಂದ್ ಸಂದರ್ಭದಲ್ಲಿ ಬುರ್ಕಾ ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು, ರಾಜ್ಯ ಸರ್ಕಾರದ ಅಸಹಕಾರ, ಪೊಲೀಸರ ವಿರೋಧದ ನಡುವೆಯೂ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಯಶಸ್ವಿಯಾಗಿದೆ. ದೇಶಕ್ಕೆ ನಮ್ಮ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.
3
+ ಬೆಂಗಳೂರಿನಲ್ಲಿ 50 ಸಾವಿರ, ರಾಜ್ಯಾದ್ಯಂತ ಲಕ್ಷಾಂತರ ಪೊಲೀಸರನ್ನು ನಿಯೋಜಿಸಿ ರಾಜ್ಯ ಸರ್ಕಾರ ಹೋರಾಟಗಾರರನ್ನು ಬಂದ್ ಮಾಡಿದೆ. ನಾವು ಕಾವೇರಿಗಾಗಿ ಕರ್ನಾಟಕ ಬಂದ್ ಮಾಡಿದ್ದೇವೆ. ಸರ್ಕಾರ ನಮ್ಮನ್ನೆ ಬಂದ್ ಮಾಡಿದೆ. ತಮಿಳುನಾಡಿನಲ್ಲಿ ಪೊಲೀಸರು ರಸ್ತೆ ತಡೆ ಅವರ ರಾಜ್ಯ ಪರವಾಗಿ ನಿಂತಿದ್ದಾರೆ. ಕರ್ನಾಟಕದಲ್ಲಿ ಪೊಲೀಸರು ಹೋರಾಟಗಾರರನ್ನೇ ಬಂಸುತ್ತಿದ್ದಾರೆ. ಇದು ನೋವಿನ ಸಂಗತಿ. ಹೋರಾಟದ ಹಿನ್ನೆಲೆಯಲ್ಲಿ ಇರುವ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ ಸೇರಿದಂತೆ ಅನೇಕರನ್ನು ಕಾರಣ ಇಲ್ಲದೆ ಬಂಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.
4
+ ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ
5
+ ಕನ್ನಡ ಪರ ಸಂಘಟನೆಗಳು ಟೌನ್ ಹಾಲ್‍ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ್ದರೆ ರಾಜ್ಯ ಸರ್ಕಾರಕ್ಕೆ ಏನು ತೊಂದರೆಯಾಗುತ್ತಿತ್ತು. ಆದರೆ ನಿಷೇಧಾಜ್ಞೆ ಜಾರಿಗೆ ತಂದು ಅಡ್ಡಿ ಪಡಿಸಲಾಗಿದೆ. ಟೌನ್‍ಹಾಲ್‍ನಿಂದ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರೆ ಸರ್ಕಾರದ ಮಡಿ ಹಾಳಾಗುತ್ತಿತ್ತೆ. ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಮಾಡಿದರೆ ಮೈಲಿಗೆಯಾಗುವುದಿಲ್ಲವೇ. ಈ ದ್ವಿಮುಖ ನೀತಿ ಏಕೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಏನು ಬೇಕಾದರೂ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶ್ವಸಂಸ್ಥೆ ಪರವಾನಗಿ ನೀಡಿದೆಯೇ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
6
+ ರಾಜ್ಯ ಸರ್ಕಾರದ ಸಚಿವರು ಪಾಳೇಗಾರರಂತೆ ವರ್ತಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್ ಯಾವತ್ತೂ ಹೋರಾಟ ಮಾಡಿಲ್ಲ. ಅವರಿಗೆ ಪ್ರತಿಭಟನೆಗಳ ಹಿನ್ನೆಲೆ ಗೋತ್ತಿಲ್ಲ. ಅದಕ್ಕಾಗಿ ಬಂದ್‍ಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಮತ್ತೊಂದೆಡೆ ಶಿವನ ಪುತ್ರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಕರುಣೆ ತೋರಿಸಲಿಲ್ಲ. ಕನಿಷ್ಠ ಸಿದ್ದರಾಮೇಶ್ವರನೂ ದಾರಿ ತೋರಿಸಲಿಲ್ಲ. ಸಿದ್ಧರಾಮೇಶ್ವರ ನಿಮ್ಮನ್ನು ನಾವು ಎಷ್ಟು ನೆನಪಿಸಿಕೊಳ್ಳುತ್ತೇವೆ. ನಿಮ್ಮ ಕಣ್ಣಿಗೆ ನಾವು ಬೀಳಲೇ ಇಲ್ಲವೇ ಎಂದು ನಾಟಕೀಯವಾಗಿ ಆಕ್ಷೇಪ ವ್ಯಕ್ತಪಡಿಸಿದರು.
7
+ ಮುಸ್ಲಿಂ ಮಹಿಳೆಯರು ಧರಿಸುವ ಬುರ್ಕಾ ಧರಿಸಿ ಇಂದು ತಾವು ಪ್ರತಿಭಟನೆಯಲ್���ಿ ಭಾಗವಹಿಸಿದ್ದು, ಇದು ಮಹಿಳೆಯರ ಪಾಲ್ಗೋಳ್ಳುವಿಕೆ ಮತ್ತು ನ್ಯಾಯದ ಸಂದೇಶ ಸಂದೇಶವಾಗಿದೆ. ಮಹಿಳೆಯರಿಗೆ ಶಾಸನ ಸಭೆಯಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಕಾಯ್ದೆ ಸಂಸತ್‍ನಲ್ಲಿ ಅಂಗೀಕಾರಗೊಂಡಿದೆ. ಅದಕ್ಕಾಗಿ ಮಹಿಳೆಯರಿಗೆ ಆದ್ಯತೆ ನೀಡುವ ಅಗತ್ಯವಿದೆ. ರಾಜ್ಯ ಸರ್ಕಾರ ಕನ್ನಡಿಗರನ್ನು ಕತ್ತಲಿನಲ್ಲಿಟ್ಟು ತಮಿಳುನಾಡಿಗೆ ನೀರು ಬೀಡುತ್ತಿದೆ ಎಂಬುದರ ಆಕ್ರೋಶವೂ ಇದರಲ್ಲಿ ಅಡಗಿದೆ ಎಂದರು.
eesanje/url_46_340_6.txt ADDED
@@ -0,0 +1,6 @@
 
 
 
 
 
 
 
1
+ ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ
2
+ ಬೆಂಗಳೂರು,ಸೆ.29-ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುವುದನ್ನು ವಿರೋಸಿ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿದ್ದ ಆಖಂಡ ಕರ್ನಾಟಕ ಬಂದ್‍ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಿಸಿ ತಟ್ಟಿದೆ. ಪ್ರಯಾಣಿಕರು ಇಲ್ಲದ ಕಾರಣ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ.
3
+ ದೆಹಲಿ, ಮುಂಬೈ, ಕೊಲ್ಕತ್ತಾ ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು 22 ವಿಮಾನಗಳು ರದ್ದಾಗಿವೆ. ಇನ್ನು ಬೆಂಗಳೂರಿನಿಂದ ವಿವಿಧೆಡೆಗೆ ಹೋಗಬೇಕಿದ್ದ 22 ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದವು.
4
+ ಮನೆಯಲ್ಲಿ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್
5
+ ಇನ್ನು ಬೇರೆ ಬೇರೆ ಕಡೆಗಳಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಸಹ ರದ್ದಾಗಿದ್ದವು. ಕರ್ನಾಟಕ ಬಂದ್ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರೆ, ಅಲ್ಲಿಂದ ಬೇರೆ ಕಡೆ ಹೋಗಲು ಯಾವುದೇ ವಾಹನಗಳು ಇರುವುದಿಲ್ಲ ಎಂಬುದನ್ನು ಅರಿತ ಪ್ರಯಾಣಿಕರು ಬೆಂಗಳೂರು ಪ್ರವಾಸವನ್ನೂ ಸಹ ರದ್ದುಗೊಳಿಸಿದ್ದಾರೆ. ಇದರಿಂದ ಪ್ರಯಾಣಿಕರಿಲ್ಲದೇ ಒಟ್ಟು 44 ವಿಮಾನಗಳು ರದ್ದುಗೊಂಡಿವೆ.
6
+ ಬಂದ್‍ಗೆ ಕರೆ ಕೊಟ್ಟಿದ್ದರಿಂದ ಯಾರು ಇಂದಿನ ದಿನಕ್ಕೆ ವಿಮಾನದ ಟಿಕೆಟ್ ಬುಕ್ ಮಡಿಕೊಂಡಿರಲಿಲ್ಲ. ಇನ್ನೂ ಕೆಲವರು ಬುಕ್ ಮಾಡಿದ್ದರೂ ವಿಮಾನ ನಿಲ್ದಾಣಕ್ಕೆ ಹೋಗಲು ವಾಹನಗಳು ಇಲ್ಲದಿದ್ದರಿಂದ ಕೊನೆ ಕ್ಷಣದಲ್ಲಿ ವಿಮಾನದ ಟಿಕೆಟ್ ರದ್ದು ಮಾಡಿದ್ದಾರೆ ಎಂದು ಅಕಾರಿಗಳು ತಿಳಿಸಿದ್ದಾರೆ.
eesanje/url_46_340_7.txt ADDED
@@ -0,0 +1,6 @@
 
 
 
 
 
 
 
1
+ ಕರ್ನಾಟಕ ಬಂದ್ : - ಬಸ್‍ಗಳಿದ್ದರೂ ಪ್ರಯಾಣಿಕರೇ ಇಲ್ಲ
2
+ ಬೆಂಗಳೂರು, ಸೆ.29- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪ್ರಯಾಣಿಕರ ಸಂಖ್ಯೆ ಬೆರಳೆಣಿಕೆಯಷ್ಟು ಇದದ್ದು ಕಂಡು ಬಂದಿತು. ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ, ಜಯನಗರ, ಶಿವಾಜಿ ನಗರ, ಕಲಾಸಿಪಾಳ್ಯ, ಕೆಆರ್ ಮಾರುಕಟ್ಟೆ ಸೇರಿದಂತೆ ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರು ವಿರಳವಾಗಿರುವುದು ಎದ್ದು ಕಾಣುತ್ತಿತ್ತು.
3
+ ಸದಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಆಸನೆಗಳೇ ಭರ್ತಿಯಾಗದಷ್ಟು ಪ್ರಯಾಣಿಕರಿದ್ದರು. ಬಂದ್ ಇದ್ದರೂ ಎಂದಿನಂತೆ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳ ಸೇವೆಯನ್ನು ಒದಗಿಸಲಾಗಿತ್ತು. ಶಾಲಾ- ಕಾಲೇಜುಗಳಿಗೆ ರಜೆ ನೀಡಿರುವುದು, ವಿವಿಧ ವಾಣಿಜ್ಯ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ಮುಚ್ಚಿರುವುದರಿಂದ ಸಹಜವಾಗಿಯೇ ಪ್ರಯಾಣಿಕರ ಹೋರಾಟ ಕಡಿಮೆಯಾಗಿದೆ.
4
+ ವಾಹನಗಳ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದ ಬೆಂಗಳೂರು ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸಾರಿಗೆ ಸಂಸ್ಥೆಯ ವಾಹನಗಳು ಹಾಗೂ ಕೆಲವು ಖಾಸಗಿ ವಾಹನಗಳು ಮಾತ್ರ ವಿರಳವಾಗಿ ಸಂಚರಿಸುತ್ತಿದ್ದು, ಎಲ್ಲೂ ಕೂಡ ಟ್ರಾಫಿಕ್ ಜಾಮ್ ಆದ ವರದಿಯಾಗಿಲ್ಲ.
5
+ 6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ
6
+ ದೈನಂದಿನ ಬಸ್ ಸೇವೆಯಲ್ಲಿ ಯಾವುದೇ ರೀತಿಯ ಕಡಿತ ಮಾಡಿಲ್ಲ. ಎಂದಿನಂತೆ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕಡಿಮೆ ಇದೆ ಎಂದು ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಮೂಲಗಳು ತಿಳಿಸಿವೆ.ಇಂದು ಬೆಳಗ್ಗೆ 9 ಗಂಟೆ ವೇಳೆಗೆ ಕೆಎಸ್‍ಆರ್‍ಟಿಸಿಯ 82 ಘಟಕಗಳಿಂದ 1948 ಕಾರ್ಯಾಚರಣೆ ಮಾಡಲಾಗಿತ್ತು. ಶೇ. 60ರಷ್ಟು ಬಸ್ ಸಂಚಾರ ಎಂದಿನಂತೆ ಇದೆ ಎಂದು ಕೆಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.
eesanje/url_46_340_8.txt ADDED
@@ -0,0 +1,6 @@
 
 
 
 
 
 
 
1
+ ಸರ್ಕಾರವು ಕನ್ನಡಿಗರ ಭಾವನೆಗಳನ್ನು ದಮನ ಮಾಡಬಾರದು : ಎಚ್‍ಡಿಕೆ
2
+ ಬೆಂಗಳೂರು, ಸೆ.29-ಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದ್ದು, ಕರ್ನಾಟಕ ಬಂದ್‍ಗೆ ಎಲ್ಲೆಡೆಯಿಂದ ಉತ್ತಮ ಪ್ರಿತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
3
+ ರಾಜ್ಯದ ಕಾಂಗ್ರೆಸ್ ಸರ್ಕಾರವು ಕನ್ನಡಿಗರ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ.
4
+ 6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ
5
+ ನಾಡು, ನುಡಿ, ನೆಲಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆಯ ರಾಜ್ಯಗಳಿಗೆ ಎಚ್ಚರಿಕೆ ಗಂಟೆಯಾಗಬೇಕು. ಕಾವೇರಿ ನಮ್ಮದು ಎಂದು ಅವರು ತಿಳಿಸಿದ್ದಾರೆ.
6
+ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಪರ ಸಂಘಟನೆಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನೀಡಿದ್ದ ಇಂದಿನ ಕರ್ನಾಟಕ ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತ್ತು.
eesanje/url_46_340_9.txt ADDED
@@ -0,0 +1,6 @@
 
 
 
 
 
 
 
1
+ ಕಾವೇರಿ ಸಮಸ್ಯೆಗೆ ಎಲ್ಲಾ ರಾಜಕೀಯ ಪಕ್ಷಗಳು ಕಾರಣ : ವಿನೋದ್ ರಾಜ್
2
+ ಆರ್ಟಿಕಲ್ 262 ಪ್ರಕಾರ ಎರಡು ರಾಜ್ಯಗಳ ನಡುವಿನ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೊರ್ಟ ನೀಡುವ ತೀರ್ಪು ಅಂತಿಮವಲ್ಲ. ಮೇಲ್ಮನೆ ಸಲ್ಲಿಸುವ ಅಧಿಕಾರವಿದೆ.ಇದನ್ನ ಗಮನಿಸಿ ಸರ್ಕಾರ ಕೂಡಲೆ ಸುಪ್ರೀಮ್ ಕೋರ್ಟಗೆ ಮೇಲ್ಮನೆ ಸಲ್ಲಿಸಬೇಕು ಎಂದು ನಟ ವಿನೋದ್ ರಾಜ್ ಆಗ್ರಹಿಸಿದರು.
3
+ ನೆಲಮಂಗಲದಲ್ಲಿ ಕಾವೇರಿ ಕುರಿತ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಇವರು, ನಮ್ಮನ್ನ ಆಳಿದ ಎಲ್ಲ ಸರ್ಕಾರಗಳ ವೈಫಲ್ಲದಿಂದ ಕಾವೇರಿ ನೀರಿನ ವಿಷಯದಲ್ಲಿ ಅನ್ಯಾಯವಾಗುತ್ತಿದೆ.
4
+ ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-09-2023)
5
+ ನಮಗೆ ಕೇವಲ 34 ಭಾಗ ತಮಿಳುನಾಡಿಗೆ ಉಳಿದ ಭಾಗವೆಂದರೆ ಅದು ನಮಗೆ ಮಾಡಿದ ಅನ್ಯಾಯ.ಇನೇನು ಉಳಿದಿದೆ ನಮಗೆ, ಸಾಯಬೇಕಷ್ಟೆ.ಇಲ್ಲಿಯ ತನಕ ಕರ್ನಾಟಕದ ಪರ ವಾದ ಮಾಡಿದ ವಕೀಲರ ವೈಫಲ್ಯ ಎದ್ದು ಕಾಣುತ್ತಿದೆ.
6
+ ಸರ್ಕಾರ ಕಾನೂನಿನ ತಿದ್ದುಪಡಿ ತರಬೇಕು.ನೀರಿನ ವಿಷಯ ಬಂದಾಗ ಎಲ್ಲಾ ಪಕ್ಷಗಳು ಒಂದಾಗಬೇಕು.ಸರ್ವಪಕ್ಷ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಸಂಸದರು ಮಾತನಾಡಬೇಕು ಎಂದು ಕರೆ ನೀಡಿದರು.
eesanje/url_46_341_1.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಕರ್ನಾಟಕ ಬಂದ್‍ಗೆ ಅನುಮತಿ ಇಲ್ಲ : ಗೃಹಸಚಿವ ಪರಮೇಶ್ವರ್
2
+ ಬೆಂಗಳೂರು, ಸೆ.28- ಕಾವೇರಿ ನದಿ ನೀರಿನ ಹಂಚಿಕೆ ವಿಷಯವಾಗಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‍ಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಹಿತಾಸಕ್ತಿ ವಿಷಯವಾಗಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅಧಿಕಾರ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೇವೆ. ಆದರೆ ಬಂದ್‍ಗೆ ಅನುಮತಿ ಇಲ್ಲ ಎಂದಿದ್ದಾರೆ.
3
+ ಮೊನ್ನೆ ಬೆಂಗಳೂರು ಬಂದ್ ನಡೆದಾಗ ಹೈಕೋರ್ಟ್ ರಾಜ್ಯಸರ್ಕಾರಕ್ಕೆ ಕಟ್ಟೆಚ್ಚರಿಕೆ ನೀಡಿದೆ. ಸುಪ್ರೀಂಕೋರ್ಟಿನ ತೀರ್ಪಿನ ಅನುಸಾರ ಪ್ರತಿಭಟನಾ ಮೆರವಣಿಗೆ ಹಾಗೂ ಬಂದ್‍ಗಳಿಗೆ ಅವಕಾಶ ಇಲ್ಲ. ಅಂತಹ ಯಾವುದೇ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಹೈಕೋರ್ಟ್ ತಾಕೀತು ಮಾಡಿದೆ.
4
+ ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ಬಂದ್‍ಗೆ ಅವಕಾಶ ಇಲ್ಲ. ಪೊಲೀಸರು ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ ಅಗತ್ಯ ಇರುವ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ. ಬಲವಂತದ ಬಂದ್ ಮಾಡಲು ಮುಂದಾದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು. ಬಂದ್ ಮಾಡುವುದಾಗಿ 20-30 ಸಂಘಟನೆಗಳು ಹೇಳಿಕೆ ನೀಡಿವೆ. ಕೆಲವರು ತೆರೆದ ವಾಹನದಲ್ಲಿ ಬಂದ್‍ಗೆ ಬೆಂಬಲ ಕೋರಿ ಪ್ರಚಾರ ಮಾಡುತ್ತಿದ್ದಾರೆ. ಪೊಲೀಸರು ಅಂತಹ ಸಂಘಟನೆಗಳಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದು, ಬಂದ್ ಮಾಡದಂತೆ ಸೂಚಿಸಿದ್ದಾರೆ ಎಂದರು.
5
+ ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ಕುಸಿತ ಕಂಡಿವೆ. ಕೃಷಿ ಆದಾಯ ಶೇ. 50 ರಷ್ಟು ಕಡಿಮೆಯಾಗಿದೆ. ಬರಪರಿಸ್ಥಿತಿಯಿಂದಾಗಿ 20 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಸರ್ಕಾರ ಎನ್‍ಡಿಆರ್‍ಎಸ್ ಅಡಿ ಅಲ್ಪಸ್ವಲ್ಪ ನೆರವು ನೀಡಬಹುದು. ಆದರೆ ಪೂರ್ಣ ಪ್ರಮಾಣದ ನಷ್ಟ ಭರಿಸಲು ಸಾಧ್ಯವಿಲ್ಲ. ಈ ಹಂತದಲ್ಲಿ ಪದೇಪದೇ ಬಂದ್‍ಗಳು ನಡೆಯುವುದರಿಂದ ಆರ್ಥಿಕ ನಷ್ಟವಾಗತ್ತದೆ. ಬೆಂಗಳೂರು ಬಂದ್ ದಿನ ಒಂದೂವರೆ ಸಾವಿರ ಕೋಟಿ ರೂ.ಗಳ ನಷ್ಟ ವಾಗಿದೆ. ಇಂದು ರಜೆ, ನಾಳೆ ಮತ್ತೆ ಬಂದ್ ನಡೆದರೆ ವ್ಯಾಪಾರೋದ್ಯಮಗಳು ಬಹಳ ನಷ್ಟ ಅನುಭವಿಸುತ್ತವೆ ಎಂದು ಹೇಳಿದರು.
6
+ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ
7
+ ಬಂದ್‍ಗಳು ನಡೆದಾಕ್ಷಣ ಏನೂ ಪ್ರಯೋಜನವಾಗುವುದಿಲ್ಲ. ಕಾವೇರಿ ನೀರು ನಿಯಂತ್ರಣಾ ಸಮಿತಿ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳು ತಮ್ಮ ಆದೇಶವನ್ನು ಬದಲಾವಣೆ ಮಾಡುವುದಿಲ್ಲ. ರಾಜ್ಯಸರ್ಕಾರ ತನ್ನ ಪಾಲಿನ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುತ್ತಿದೆ. ನ್ಯಾಯಾಲಯಗಳು ಹಾಗೂ ಸಮಿತಿಗಳ ಮುಂದೆ ಪ್ರಬಲ ವಾದ ಮಂಡಿಸಿದ್ದೇವೆ. ಅದರ ಜೊತೆಗೆ ಸುಪ್ರೀಂಕೋರ್ಟ್ ಮೆಟ್ಟಿಲೇರುವ ತಯಾರಿಗಲು ನಡೆದಿವೆ. ಇದರಲ್ಲಿ ಯಾವುದೇ ವೈ���ಲ್ಯವಾಗಿಲ್ಲ ಎಂದರು.
8
+ ರಾಜಕೀಯಕ್ಕಾಗಿ ಹೊಸದಾಗಿ ಮದುವೆಯಾಗಿರುವ ಜೆಡಿಎಸ್, ಬಿಜೆಪಿ ಪಕ್ಷಗಳು ವಾಸ್ತವವನ್ನು ಮರೆಮಾಚಿ ಟೀಕೆ ಮಾಡುತ್ತಿವೆ. ನಾವು ಕಾವೇರಿ ವಿವಾದಲ್ಲಿ ಯಾವುದನ್ನೂ ಮುಚ್ಚಿಟ್ಟಿಲ್ಲ. ಎರಡು ಬಾರಿ ಸರ್ವ ಪಕ್ಷಗಳ ಸಭೆ ನಡೆಸಿದ್ದೇವೆ. ಪ್ರತಿ ಹಂತದಲ್ಲೂ ರಾಜ್ಯದ ಜನರಿಗೆ ಮಾಹಿತಿ ನೀಡುತ್ತಿದ್ದೇವೆ. ಈ ಹಿಂದೆ ಆ ಎರಡೂ ಪಕ್ಷಗಳು ಅಧಿಕಾರದಲ್ಲಿದ್ದಾಗ ನಾಡಿನ ಹಿತಾಸಕ್ತಿಗನುಗುಣವಾಗಿ ಕೆಲಸ ಮಾಡಿವೆ. ನಾವೂ ಕೂಡ ಅದೇ ರೀತಿಯೇ ಕೆಲಸ ಮಾಡುತ್ತಿದ್ದೇವೆ. ರಾಜಕೀಯಕ್ಕಾಗಿಯೇ ಟೀಕೆ ಮಾಡುವುದು ಸರಿಯಲ್ಲ ಮುಂದೆ ಒಂದು ವೇಳೆ ಅವರು ಅಧಿಕಾರಕ್ಕೆ ಬಂದರೆ ಆಗ ನಾವು ಟೀಕೆ ಮಾಡುತ್ತೇವೆ ಎಂದು ಹೇಳಿದರು.
9
+ ಕರ್ನಾಟಕ ಕಾಂಗ್ರೆಸ್‍ಗೆ ತಮಿಳುನಾಡಿನ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯ ಇಲ್ಲ. ನಾಡಿನ ಹಿತಾಸಕ್ತಿಗೆ ಸಂಬಂಧಪಟ್ಟಂತೆ ಎಲ್ಲಾ ಪಕ್ಷಗಳೂ ಬದ್ಧವಾಗಿವೆ. ಇದರಲ್ಲಿ ರಾಜಕಾರಣ ಬೆರೆಸುವುದು ಬೇಡ ಎಂದರು.
10
+ ಬಿಜೆಪಿ, ಜೆಡಿಎಸ್ ಮೈತ್ರಿಯ ಬಳಿಕ ಆ ಪಕ್ಷಗಳಲ್ಲಿ ಅಸಮಾಧಾನಗೊಂಡ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವುದು ಹೆಚ್ಚಾಗುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಯಾರೂ ಸೈದ್ಧಾಂತಿಕ ರಾಜಕಾರಣ ಮಾಡುತ್ತಿಲ್ಲ. ಎಲ್ಲರೂ ಅನುಕೂಲ ಸಿಂಧು ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸೇರಿಸಿಕೊಳ್ಳುತ್ತೇವೆ. ನಮ್ಮ ತುಮಕೂರು ಜಿಲ್ಲೆಯಲ್ಲೂ ಅನೇಕ ಮಂದಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಹೇಳಿದರು.
11
+ ಲಾಲೂ ಭೇಟಿಯಾದ ರಾಜಾ, ಬಿಜೆಪಿ ಮಣಿಸಲು ಕಾರ್ಯತಂತ್ರ
12
+ ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯವಾಗಿದೆ. ಸಿ.ಎಂ.ಇಬ್ರಾಹಿಂ ಸದ್ಯಕ್ಕೆ ಜೆಡಿಎಸ್‍ನ ರಾಜ್ಯಾಧ್ಯಕ್ಷರಾಗಿದ್ದಾರೆ. ಪ್ರಸ್ತುತ ಬೆಳವಣಿಗೆಯ ಬಗ್ಗೆ ಅವರು ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಜೆಡಿಎಸ್ ಬಿಡುತ್ತೇನೆ ಅಥವಾ ರಾಜ್ಯಾಧ್ಯಕ್ಷ ಹುದ್ದೆ ತೊರೆಯುತ್ತೇನೆ ಎಂದಾಗಲಿ ಹೇಳಿಲ್ಲ. ಹೀಗಾಗಿ ಅವರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
eesanje/url_46_341_10.txt ADDED
@@ -0,0 +1,8 @@
 
 
 
 
 
 
 
 
 
1
+ ತಮಿಳುನಾಡು ಕೇಳಿದಷ್ಟು ನೀರು ಬಿಡಲು ಸಾಧ್ಯವಿಲ್ಲ : ಡಿಕೆಶಿ
2
+ ಬೆಂಗಳೂರು, ಸೆ.26- ತಮಿಳುನಾಡು ಏನೇ ವಾದ ಮಾಡಿದರೂ ನಮ್ಮಲ್ಲಿ ನೀರಿಲ್ಲ, ತಮಿಳುನಾಡು ಕೇಳಿದಷ್ಟು ನೀರನ್ನು ಬಿಡಲು ಆಗುವುದಿಲ್ಲ, ನೀರನ್ನು ಬಿಡುವುದೂ ಇಲ್ಲ. ನಮ್ಮ ಬಳಿ ಅಷ್ಟು ನೀರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಮದಿಗೆ ಮಾಡಿನಾಡಿರುವ ಅವರು, ಇಂದು ನಡೆದ ಕಾವೇರಿ ನೀರು ನಿಯಂತ್ರಣಾ ಸಮಿತಿ ಮುಂದೆ ತಮಿಳುನಾಡು ಕೆಆರ್‍ಎಸ್‍ನ ಒಳಹರಿವು ಹೆಚ್ಚಾಗಿದೆ ಎಂಬ ವಾದ ಮಂಡಿಸಿ ಇದರ ಆಧಾರದ ಮೇಲೆ ತಮಿಳುನಾಡಿಗೆ ಪ್ರತಿದಿನ 12,500 ಕ್ಯೂಸೆಕ್ ನೀರು ಬಿಡಬೇಕೆಂಬ ವಾದ ಮಂಡಿಸಿದೆ.
3
+ 5,000 ಕ್ಯೂಸೆಕ್ ಬಿಡಲು ನಮ್ಮ ಬಳಿ ನೀರಿಲ್ಲ. ಇನ್ನು 12,500 ಕ್ಯೂಸೆಕ್ ಬಿಡಲು ಹೇಗೆ ಸಾಧ್ಯ, ಅವರು ಏನೇ ವಾದ ಮಾಡಿದರೂ ನಮ್ಮಲ್ಲಿ ನೀರಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿದಿನ ಕಾವೇರಿ ನದಿಪಾತ್ರದ ಜಲಾಶಯಗಳಿಗೆ ಎಷ್ಟು ನೀರು ಬರುತ್ತದೆ ಮತ್ತು ಹೊರ ಹೋಗುತ್ತದೆ ಎನ್ನುವ ಮಾಹಿತಿಯನ್ನು ಮುಚ್ಚಿಡಲು ಸಾಧ್ಯವಿಲ್ಲ. ತಾವು ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಒಳಹರಿವಿನ ಮೇಲೆ ನಿಗಾ ವಹಿಸಿದ್ದು, 8 ರಿಂದ 10 ಸಾವಿರ ಕ್ಯೂಸೆಕ್ ಹರಿವು ಹೆಚ್ಚಾಗಿದೆ. ಅದೇ ಸಂದರ್ಭದಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತ ಬಿದ್ದ ಮಳೆಯಿಂದಾಗಿ ಸಹಜವಾಗಿಯೇ ತಮಿಳುನಾಡಿಗೆ ನೀರು ಹರಿಯುತ್ತಿರುವ ಪ್ರಮಾಣವೂ ಹೆಚ್ಚಾಗಿದೆ. ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ಅದು ದಾಖಲಾಗುತ್ತದೆ. ಇದನ್ನು ಎರಡೂ ರಾಜ್ಯಗಳ ಅಧಿಕಾರಿಗಳು ಗಮನಿಸುತ್ತಿದ್ದಾರೆ ಎಂದು ಹೇಳಿದರು.
4
+ ಬೆಂಗಳೂರು ಬಂದ್ : ತಾರಕಕ್ಕೇರಿದ ಕಾವೇರಿ ಕೂಗು, ರಾಜಭವನ ಮುತ್ತಿಗೆಗೆ ಹೋರಾಟಗಾರರ ಯತ್ನ
5
+ ಜಲಾಶಯಗಳಿಗೆ ನೀರಿನ ಒಳಹರಿವು ಮತ್ತು ಹೊರಹರಿವಿನ ಮೇಲೆ ನೀರು ನಿಯಂತ್ರಣಾ ಸಮಿತಿ ನಿಗಾ ಇಟ್ಟಿದೆ. ಆದ ಕಾರಣ ನೀರಿನ ಹರಿವಿನ ವಿಚಾರದಲ್ಲಿ ನಾನಾಗಲಿ, ಅವರಾಗಲಿ ಸುಳ್ಳು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
6
+ ನಾವು ಸುಳ್ಳು ಹೇಳಿದರೆ ನಮ್ಮ ಮುಂದೆ ವಾಸ್ತಾವಾಂಶ ಇಡುತ್ತಾರೆ. ತಾಂತ್ರಿಕ ವಿಚಾರಗಳು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ನೀಡುತ್ತಾರೆ. ನಾವು ಹೇಳಿದರೆ ಕೇಳುವುದಿಲ್ಲ ಎಂದರು. ರಾಜ್ಯದಲ್ಲಿ ಕನ್ನಡಿಗರ ಸರ್ಕಾರವಿಲ್ಲ, ಸ್ಟಾಲಿನ್ ಸರ್ಕಾರವಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಕುಮಾರಸ್ವಾಮಿ ಅವರ ತಂದೆ ದೇವೇಗೌಡರು ಏನು ಹೇಳಿದ್ದರು, ಈಗ ಏನು ಪತ್ರ ಬರೆದಿದ್ದಾರೆ ಎಂದು ಗೊತ್ತಿದೆಯೇ ಅವರಿಗೆ? ನೀರಿನ ವಿಚಾರದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಹಿತ ಕಾಪಾಡಲಿ ಎಂದು ತಿಳಿಸಿದರು.
7
+ ನೋವನ್ನು ವ್ಯಕ್ತಪಡಿಸಲು ನಮ್ಮ ಜನ ಬಂದ್ ಮಾಡಿದ್ದಾರೆ : ಎಚ್‍ಡಿಡಿ
8
+ ಇಂದು ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆಯಿದ್ದು ರಾಜ್ಯದ ಅಧಿಕಾರಿಗಳು ವ��ಸ್ತವಾಂಶವನ್ನು ಸಮಿತಿಯ ಮುಂಡಿಡಲಿದ್ದಾರೆ. ರಾಜ್ಯದ ಹಿತವೇ ನಮ್ಮ ಮೊದಲ ಆದ್ಯತೆ, ಇಂದು ಅಥವಾ ನಾಳೆ ನಾನು ಮತ್ತು ಮುಖ್ಯಮಂತ್ರಿಗಳು ಚರ್ಚೆ ಮಾಡಿ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದರು. ಇದೇ ವೇಳೆ, ಕಾವೇರಿ ನೀರಿನ ವಿಚಾರವಾಗಿ ಬಂದ್‍ಗೆ ಸಹಕಾರ ನೀಡಿದ ಬೆಂಗಳೂರಿನ ನಾಗರಿಕರಿಗೆ ಅಭಿನಂದನೆಗಳು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಪ್ರತಿಭಟನೆ ಮಾಡಿದ ಎಲ್ಲಾ ಸಂಘಟನೆಯವರಿಗೆ ಮಾಧ್ಯಮಗಳ ಮೂಲಕ ಧನ್ಯವಾದ ಎಂದು ತಿಳಿಸಿದರು.
eesanje/url_46_341_11.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಬೆಂಗಳೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ
2
+ ಬೆಂಗಳೂರು, ಸೆ.26- ನಾಡಿನ ಜೀವನದಿ ಕಾವೇರಿಗಾಗಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಕರೆ ನೀಡಲಾಗಿದ್ದ ಬೆಂಗಳೂರು ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಸುಮಾರು 150 ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿದ್ದ ಬೆಂಗಳೂರು ಬಂದ್‍ಗೆ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಭಾರೀ ಬೆಂಬಲ ನೀಡಿದ್ದಾರೆ.
3
+ ನಗರದ ಪ್ರಮುಖ ರಸ್ತೆಗಳ ಅಂಗಡಿಗಳು ಮುಚ್ಚಲ್ಪಟ್ಟಿದ್ದವು. ಬಿಎಂಟಿಸಿ, ಕೆಎಸ್‍ಆರ್‍ಟಿಸಿ, ಖಾಸಗಿ ಬಸ್‍ಗಳ ಸಂಚಾರ ವಿರಳವಾಗಿತ್ತು. ಆಟೋ, ಕ್ಯಾಬ್‍ಗಳು ಬೆರಳೆಣಿಕೆಯಷ್ಟು ಓಡಾಡುತ್ತಿದ್ದವು. ಕೆಲವರು ಇದರ ದುರುಪಯೋಗ ಪಡೆದುಕೊಂಡು ಪ್ರಯಾಣಿಕರನ್ನು ಸುಲಿಗೆ ಮಾಡುವ ಯತ್ನವನ್ನೂ ನಡೆಸಿದರು.ಪೊಲೀಸರು ಮುಂಜಾಗ್ರತವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಎಲ್ಲೆಡೆ ವ್ಯಾಪಕ ಬಿಗಿ ಬಂದೋಬಸ್ತ್ ಆಯೋಜಿಸಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಖಾಕಿ ಸರ್ಪಗಾವಲು ಹಾಕಲಾಗಿತ್ತು.
4
+ ಬಂದ್‍ಗೆ ಕರೆ ನೀಡಿದ್ದ ಸಂಘಟನೆಗಳ ಪ್ರಮುಖ ನಾಯಕ ಕುರುಬೂರು ಶಾಂತಕುಮಾರ್, ಇಂದು ಬೆಳಿಗ್ಗೆ ಮೈಸೂರು ಬ್ಯಾಂಕ್ ರಸ್ತೆಯ ಮಧ್ಯಭಾಗದಲ್ಲಿ ರೈತರೊಂದಿಗೆ ಕುಳಿತು ಉಪಹಾರ ಸೇವಿಸಲು ಮುಂದಾದರು. ಅವರನ್ನು ಅಲ್ಲಿಂದ ಫ್ರೀಡಂ ಪಾರ್ಕ್‍ಗೆ ಪೊಲೀಸರು ಕರೆತಂದರು. ಅಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಸಮಾವೇಶಗೊಂಡಿದ್ದವು. ಅಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅಲ್ಲಲ್ಲಿ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡರು.ಫ್ರೀಡಂಪಾರ್ಕ್‍ನಲ್ಲಿ ರೈತರು ಖಾಲಿ ಬಿಂದಿಗೆಗಳನ್ನು ಹಿಡಿದು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
5
+ ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ವಿಫಲವಾಗಿದೆ : ಮುಖ್ಯಮಂತ್ರಿ ಚಂದ್ರು
6
+ ಈ ಸಂದರ್ಭದಲ್ಲಿ ಹೂವುಗಳನ್ನು ಹಂಚಿರುವ ಕಾರ್ಯಕರ್ತರು ಹೂವು ಕೊಡುತ್ತೇವೆ, ನೀರು ಬಿಡುವುದಿಲ್ಲ ಎಂದು ಘೋಷಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರು ಅಸ್ವಸ್ಥರಾಗಿ ಕುಸಿದುಬಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
7
+ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳು, ಓಲಾ, ಊಬರ್, ಹೋಟೆಲ್ ಮಾಲಿಕರ ಸಂಘಟನೆಗಳು, ಆಟೋ ಚಾಲಕರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ನೂರಾರು ಸಂಘಟನೆಗಳು ಬಂದ್‍ಗೆ ಬೆಂಬಲ ನೀಡಿದ್ದವು. ಹೀಗಾಗಿ ಬಂದ್ ಯಶಸ್ಸು ಕಂಡಿದೆ.
8
+ ನಗರದೆಲ್ಲೆಡೆ ಅಂಗಡಿಗಳು ಹಾಗೂ ವ್ಯಾಪಾರೋದ್ಯಮಗಳು ಮುಚ್ಚಲ್ಪಟ್ಟು ವಾತಾವರಣ ಬಿಕೋ ಎನ್ನುತ್ತಿತ್ತು. ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಿದರು. ಕೆಲವು ಪ್ರಮುಖ ಕೇಂದ್ರ ಸ್ಥಾನಗಳಲ್ಲಿ ಪ್ರ��ಿಭಟನೆಗಳು ನಡೆದಿರುವ ವರದಿಯಾಗಿವೆ.
9
+ ಶಾಲಾ-ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿತ್ತು. ಕೆಲವು ಖಾಸಗಿ ಶಾಲೆಗಳು ತರಗತಿಗಳನ್ನು ನಡೆಸಿದರಾದರೂ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿತ್ತು. ಕೆಲವು ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಿವೆ.
10
+ ಕಳೆದ ಮೂರು ದಿನಗಳಿಂದಲೂ ಬಂದ್ ಬಗ್ಗೆ ವ್ಯಾಪಕ ಚರ್ಚೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾನ್ಯವಾಗಿ ಪ್ರವಾಸ ಅಥವಾ ಓಡಾಟವನ್ನು ನಿಯಂತ್ರಿಸಿಕೊಂಡಿದ್ದರು. ಹೀಗಾಗಿ ಬೆಂಗಳೂರಿನ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಶಾಂತಿನಗರ, ಕಲಾಸಿಪಾಳ್ಯ, ಯಶವಂತಪುರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ಬಸ್‍ಗಳು ಸಾಲುಗಟ್ಟಿ ನಿಂತಿದ್ದವು. ಬಂದ್‍ನ ನಡುವೆಯೂ ಅನಿವಾರ್ಯವಾಗಿ ಓಡಾಡಲೇಬೇಕಾದ ಪ್ರಯಾಣಿಕರು ರಸ್ತೆಯಲ್ಲಿ ಕಾದುನಿಂತು ಬಸವಳಿದಿದ್ದರು.
11
+ ಆಟೋ ಮತ್ತು ಕ್ಯಾಬ್‍ಗಳ ಪ್ರಯಾಣದರ ದುಪ್ಪಟ್ಟಾಗಿತ್ತು. ಹಾಲು, ಮೊಸರು, ಔಷ, ತರಕಾರಿಯಂತಹ ಅಗತ್ಯ ವಸ್ತುಗಳ ವಹಿವಾಟು ಎಂದಿನಂತೆ ನಡೆದಿತ್ತು. ಆಸ್ಪತ್ರೆಗಳು ಕಾರ್ಯನಿರ್ವಹಿಸಿದವು. ಬಂದ್ ಪ್ರಯುಕ್ತ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ತಮಿಳುನಾಡು, ಕರ್ನಾಟಕದ ರಾಜ್ಯಸರ್ಕಾರಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
12
+ ಫ್ರೀಡಂಪಾರ್ಕ್‍ನಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಅಣಕು ತಿಥಿ ನಡೆಸಲಾಗಿದೆ. ರಾಜ್ಯಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಮೂಲಕ ನಾಡಿನ ಹಿತಾಸಕ್ತಿಯನ್ನು ಕಡೆಗಣಿಸಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದ ಸಂಸದರು, ಅಂತರಾಜ್ಯ ನದಿ ವಿವಾದಕ್ಕೆ ಸಂಬಂಧಪಟ್ಟಂತೆ ಸಂಸತ್‍ನಲ್ಲಿ ಬಾಯಿ ಬಿಡದೆ ಮೌನಕ್ಕೆ ಶರಣಾಗುವ ಮೂಲಕ ಹೇಡಿತನ ಪ್ರದರ್ಶಿಸಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡದೇ ಉದ್ದೇಶಪೂರ್ವಕವಾಗಿ ನುಣುಚಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿಬಂದವು.
13
+ ಇಂಡೋ ಪೆಸಿಫಿಕ್ ರಾಷ್ಟ್ರಗಳ ಸಮಗ್ರತೆಗೆ ಒತ್ತು : ಮನೋಜ್‍ ಪಾಂಡೆ
14
+ ಟೌನ್‍ಹಾಲ್, ಫ್ರೀಡಂಪಾರ್ಕ್ ಹಾಗೂ ಮೈಸೂರು ಬ್ಯಾಂಕ್ ಬಳಿ ಪ್ರತಿಭಟನೆಯಲ್ಲಿ ತೊಡಗಿದ್ದ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಸರ್ಕಾರ ತಾನು ಮಾಡಬೇಕಾದ ಜವಾಬ್ದಾರಿಯನ್ನು ಮರೆತು ಕನ್ನಡಪರ ಸಂಘಟನೆಗಳನ್ನು ಬಂಸುವ ಮೂಲಕ ನಾಡ ವಿರೋಧಿತನ ಅನುಸರಿಸುತ್ತಿದೆ ಎಂಬ ಆಕ್ರೋಶಗಳು ಕೇಳಿಬಂದವು.
15
+ ಬೆಂಗಳೂರು ಬಂದ್ ವಿಷಯವಾಗಿ ಕನ್ನಡ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ನಡುವೆ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಅದರ ಹೊರತಾಗಿಯೂ ಕಾವೇರಿ ವಿಷಯವಾಗಿ ಬೆಂಗಳೂರು ಜನ ಸ್ವಯಂಪ್ರೇರಿತರಾಗಿ ಬಂದ್‍ಗೆ ಬೆಂಬಲ ನೀಡಿದ್ದಾರೆ.
16
+ ಕುರುಬೂರು ಶಾಂತಕುಮಾರ್ ಮಾತನಾಡಿ, ರಾಜ್ಯಸರ್ಕಾರ ತಮಿಳುನಾಡಿನ ಏಜೆಂಟ್‍ನಂತೆ ವರ್ತಿಸುತ್ತಿದೆ. ನಿರಂತರವಾಗಿ ಕಾವೇರಿ ನೀರನ್ನು ಹರಿಸಲಾಗುತ್ತಿದೆ. ಅದನ್ನು ತಡೆಯುವಂತೆ ನಾವು ಪ್ರತಿಭಟನೆ ನಡೆಸುತ್ತಿದ್ದರೆ, ನಮ್ಮನ್ನು ಬಂಧಿಸಿ ಚಳುವಳಿಗೂ ಅಡ್ಡಿಪಡಿಸುತ್ತಿದೆ. ಬೆಂಗಳೂರಿನಲ್ಲಿ ಸಾವಿರಕ್ಕೂ ಹೆಚ್ಚು ಮುಖಂಡರನ್ನು ಬಂಧಿಸಿದ್ದಾರೆ. ಚಳುವಳಿಯನ್ನು ಹತ್ತಿಕ್ಕುವ ಯತ್ನ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
eesanje/url_46_341_12.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ಬೆಂಗಳೂರು ಬಂದ್ : ತಾರಕಕ್ಕೇರಿದ ಕಾವೇರಿ ಕೂಗು, ರಾಜಭವನ ಮುತ್ತಿಗೆಗೆ ಹೋರಾಟಗಾರರ ಯತ್ನ
2
+ ಬೆಂಗಳೂರು, ಸೆ.26- ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಾಟಾಳ್ ನಾಗ ರಾಜ್ ನೇತೃತ್ವದಲ್ಲಿ ಕನ್ನಡ ಸಂಘಟನೆಗಳ ಒಕ್ಕೂಟ ಇಂದು ರಾಜಭವನ ಮುತ್ತಿಗೆ ಹಾಕಲು ಯತ್ನಿಸಿತು. ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕರವೇ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಸೇನೆಯ ಕೆ.ಆರ್.ಕುಮಾರ್ ಅನೇಕರು ಭಾಗ ವಹಿಸಿದ್ದರು.
3
+ ರಾಜಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ನಾಯಕರನ್ನು ಪೊಲೀಸರು ಅರ್ಧದಲ್ಲೇ ತಡೆದು ವಶಕ್ಕೆ ತೆಗೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕಾವೇರಿ ವಿವಾದಕ್ಕೆ ಸಂಬಂಧಪಟ್ಟಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಸೆ.29 ರಂದು ಕರೆದಿರುವ ಕರ್ನಾಟಕ ಬಂದ್ ನಡೆಯಲಿದೆ. ಈ ನಿಟ್ಟಿನಲ್ಲಿ ಹಲವು ಸುತ್ತಿನ ಚರ್ಚೆಗಳಾಗಿದ್ದು, ರಾಜ್ಯಾದ್ಯಂತ ಸುಮಾರು 2 ಸಾವಿರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಲಿವೆ ಎಂದು ಹೇಳಿದರು.
4
+ ಕರ್ನಾಟಕ ಬಂದ್‍ನಲ್ಲಿ ಸಾರಿಗೆ ಸೇರಿದಂತೆ ಎಲ್ಲಾ ಚಟುವಟಿಕೆಗಳೂ ಸ್ಥಗಿತಗೊಳ್ಳಲಿವೆ. ಸುಮಾರು ಒಂದು ಲಕ್ಷ ಜನ ಪ್ರತಿಭಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ರಾಜ್ಯಸರ್ಕಾರ ಯಾವುದೇ ಒತ್ತಡ ಹಾಕಿದ್ದರೂ ನಾವು ಹೋರಾಟ ಮಾಡುವುದನ್ನು ಕೈಬಿಡುವುದಿಲ್ಲ. ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಿ ಪ್ರತಿಭಟನೆ ಹತ್ತಿಕ್ಕಲು ಯತ್ನಿಸುತ್ತಿದೆ. ಇದನ್ನು ಖಂಡಿಸುತ್ತೇವೆ ಎಂದರು.
5
+ ನೋವನ್ನು ವ್ಯಕ್ತಪಡಿಸಲು ನಮ್ಮ ಜನ ಬಂದ್ ಮಾಡಿದ್ದಾರೆ : ಎಚ್‍ಡಿಡಿ
6
+ ಯಡಿಯೂರಪ್ಪ, ಕುಮಾರಸ್ವಾಮಿ ಅವರು ಬಂದ್‍ಗೆ ಬೆಂಬಲ ಎಂದು ಘೋಷಿಸಿದ್ದಾರೆ. ಸುಮ್ಮನೆ ಏಕೆ ಬೆಂಬಲ ಕೊಡುತ್ತೀರಾ, ಬೀದಿಗೆ ಬಂದು ಪ್ರತಿಭಟನೆ ಮಾಡಿ ಎಂದು ಸವಾಲು ಹಾಕಿದರು. ಹಿಂದಿನ ಅವಧಿಯಲ್ಲಿ ಎಲ್ಲಾ ಸರ್ಕಾರಗಳು ಸಂಘಟನೆಗಳ ಜೊತೆ ಚರ್ಚೆ ಮಾಡಿ ನೀರು ಬಿಡುತ್ತಿದ್ದವು. ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗಲೂ ಚರ್ಚೆ ಮಾಡಿಯೇ ನೀರು ಬಿಡಲಾಗಿತ್ತು. ಆಗಲೂ ಹೋರಾಟ ನಡೆದಿತ್ತು. ಆದರೆ ಈಗ ಯಾರನ್ನೂ ಹೇಳದೇ, ಕೇಳದೆ ನೀರು ಹರಿಸಿದ್ದಾರೆ ಎಂದು ಆರೋಪಿಸಿದರು.
7
+ ರಾಜ್ಯಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ನಿಷೇಧಾಜ್ಞೆ ಹೇರಿರುವುದು, ವ್ಯಾಪಕ ಬಂದೊಬಸ್ತ್ ಅನ್ನು ನೋಡಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ನಗುತ್ತಿದ್ದಾರೆ. ಕರ್ನಾಟಕ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಪ್ರತಿಭಟನೆಯನ್ನು ಹತ್ತಿಕ್ಕಿ ನಮಗೆ ನೀರು ಬಿಡುತ್ತಿದ್ದಾರೆ, ಶಹಬ್ಬಾಸ್ ಎಂದು ಸ್ಟಾಲಿನ್ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
8
+ ನಮ್ಮ ಕರ್ನಾಟಕ ಸರ್ಕಾರ ಮತ್ತು ತಮಿಳುನಾಡಿಗೆ ಅದೇನು ನಂಟಸ್ತನ ಇದೆಯೋ ಗೊತ್ತಿಲ್ಲ, ರಾಜ್ಯವನ್ನು ಅವರಿಗೆ ಒಪ್ಪಿಸಿಬಿಟ್ಟಂತೆ ಕಾಣುತ್ತಿದೆ. ನಮ್ಮವರು ಸ್ಟಾಲಿನ್ ಹೇಳಿದಂತೆ ಕೇಳುತ್ತಿದ್ದಾರೆ. ಒಂದು ತಿಂಗಳಿನಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
9
+ ನಮ್ಮ ಸಂಸದರು ಕಾವೇರಿ ವಿಷಯದಲ್ಲಿ ಸಂಸತ್‍ನಲ್ಲಿ ಧ್ವನಿಯೆತ್ತುತ್ತಿಲ್ಲ. ಉಳಿದ ವಿಷಯಗಳಲ್ಲಿ ನಾಜೂಕಾಗಿ ಮಾತನಾಡುತ್ತಾರೆ. ಮಾತನಾಡುವ ಮೊದಲು ತುಟಿಗೆ ಲಿಫ್ಟಿಕ್ ಹಚ್ಚಿಕೊಳ್ಳುತ್ತಾರೆ. ಈ ಮೊದಲು ಹೆಣ್ಣು ಮಕ್ಕಳು ಹಾಕಿಕೊಳ್ಳುತ್ತಿದ್ದರು. ಈಗ ಅದನ್ನು ನಮ್ಮ ಸಂಸದರೂ ಹಚ್ಚಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಸಂಸದರು ಹುಡುಗಾಟ ಆಡುತ್ತಿದ್ದಾರೆಯೇ, ಲಿಫ್ಟಿಕ್ ಹಾಕಿಕೊಂಡು ಸಂಸತ್‍ಗೆ ಹೋಗುತ್ತಿದ್ದಾರೆ. ಇವರಿಗೆ ಯೋಗ್ಯತೆ ಇದೆಯೇ, ಮೊದಲು ಸಂಸತ್ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದರು.
10
+ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದೆ : ಕುರುಬೂರು ಶಾಂತಕುಮಾರ್
11
+ ಕರ್ನಾಟಕ ಬಂದ್‍ನಿಂದ ತಮಿಳುನಾಡಿಗೆ ತಕ್ಕ ಉತ್ತರ ನೀಡುತ್ತೇವೆ. ಕನ್ನಡ ಚಿತ್ರರಂಗ ಸೇರಿದಂತೆ ಎಲ್ಲವೂ ಸ್ತಬ್ಧಗೊಳ್ಳುತ್ತವೆ. ಬೆಂಗಳೂರು ಬಂದ್ ಮಾಡುವವರಿಗೆ ಒಟ್ಟಾಗಿ ಹೋರಾಟ ಮಾಡುವಂತೆ ಸಲಹೆ ನೀಡಿದ್ದೆ. ಆದರೆ ಅವರು ಪ್ರತಿಷ್ಠೆಗೆ ಅಂಟಿಕೊಂಡು ಬೆಂಗಳೂರು ಬಂದ್ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
12
+ ಚಳುವಳಿ ಮಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಈಗ ಹೋರಾಟ ಮಾಡುತ್ತಿರುವ ಯಾರೂ ಹುಟ್ಟೇ ಇರಲಿಲ್ಲ, ಆಗಿನಿಂದಲೂ ಇಲ್ಲಿಯವರೆಗೂ 12 ಸಾವಿರ ಹೋರಾಟಗಳನ್ನು ಮಾಡಿದ್ದೇನೆ. ಇಂದು ನಡೆಸಿರುವ ಬೆಂಗಳೂರು ಬಂದ್‍ನಲ್ಲಿ ಹೋರಾಟಗಾರರನ್ನು ಸಿಕ್ಕಸಿಕ್ಕಲ್ಲಿ ಬಂಸಲಾಗುತ್ತಿದೆ. ಏಕೆ, ಅವರೇನು ಕಳ್ಳರೇ. 50 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದು ಪೊಲೀಸ್ ರಾಜ್ಯವೇ ಎಂದು ಪ್ರಶ್ನಿಸಿದರು.